Budget Session : ಏಯ್‌ ಬಾರೋ, ಬಾ ಬಾ.. ಧಮ್ಮಿದ್ರೆ ಬಾರೋ; ಮೇಲ್ಮನೆಯಲ್ಲಿ ಬಿಜೆಪಿ-ಕಾಂಗ್ರೆಸ್‌ ಮಾರಾಮಾರಿ - Vistara News

ವಿಧಾನಮಂಡಲ ಅಧಿವೇಶನ

Budget Session : ಏಯ್‌ ಬಾರೋ, ಬಾ ಬಾ.. ಧಮ್ಮಿದ್ರೆ ಬಾರೋ; ಮೇಲ್ಮನೆಯಲ್ಲಿ ಬಿಜೆಪಿ-ಕಾಂಗ್ರೆಸ್‌ ಮಾರಾಮಾರಿ

Budget Session : ವಿಧಾನ ಪರಿಷತ್‌ನಲ್ಲಿ ಕಾಂಗ್ರೆಸ್‌ ಸದಸ್ಯ ಅಬ್ದುಲ್‌ ಜಬ್ಬಾರ್‌ ಏಕವಚನ ಪ್ರಯೋಗ ಮಾಡಿದ್ದು ಭಾರಿ ಕೋಲಾಹಲಕ್ಕೆ ಕಾರಣವಾಯಿತು. ಪರಸ್ಪರ ಕೈ ಮಿಲಾಯಿಸುವ ಹಂತವನ್ನೂ ತಲುಪಿತು.

VISTARANEWS.COM


on

Budget session N Ravi kumar
ಮಹತ್ವದ, ಕುತೂಹಲಕರ ಸುದ್ದಿಗಾಗಿ ಫಾಲೊ ಮಾಡಿ
Koo

ಬೆಂಗಳೂರು: ಚಿಂತಕರ ಚಾವಡಿ ಎಂದೇ ಕರೆಯಲಾಗುವ ವಿಧಾನ ಪರಿಷತ್‌ನಲ್ಲಿ (Legislative Council) ಕಾಂಗ್ರೆಸ್‌ ಸದಸ್ಯ ಅಬ್ದುಲ್‌ ಜಬ್ಬಾರ್‌ (Abdul Jabbar Congress) ಅವರು ಬಿಜೆಪಿಯ ಎನ್‌. ರವಿ ಕುಮಾರ್ (N Ravi kumar BJP) ಅವರ ಮೇಲೆ ಏಕವಚನ ಪ್ರಯೋಗ ನಡೆಸಿದ ಘಟನೆ ಭಾರಿ ಕೋಲಾಹಲ ಸೃಷ್ಟಿಸಿದೆ. ಬುಧವಾರ ವಿಧಾನ ಪರಿಷತ್‌ನಲ್ಲಿ (Budget Session) ʻಪಾಕಿಸ್ತಾನ್‌ ಜಿಂದಾಬಾದ್‌ʼ (Pakistan Zindabad) ಘೋಷಣೆ ವಿಚಾರದಲ್ಲಿ ನಡೆದ ಮಾತಿನ ಸಮರದ ನಡುವೆ ಬೈದಾಟ ಆರಂಭಗೊಂಡು ಒಂದು ಹಂತದಲ್ಲಿ ಕೈ ಕೈ ಮಿಲಾಯಿಸುವ ಪರಿಸ್ಥಿತಿಯಲ್ಲೂ ನಿರ್ಮಾಣವಾಯಿತು. ಏಯ್‌ ಬಾರೋ.. ಧಮ್ಮಿದ್ರೆ ಬಾರೋ, ನೋಡೇ ಬಿಡೋಣ ಎಂಬೆಲ್ಲ ಪದ ಪ್ರಯೋಗಗಳು ನಡೆದವು.

ಒಂದು ಹಂತದ ಜಗಳ ನಡೆದು ಕಲಾಪವನ್ನು ಮುಂದೂಡಿ ಮರಳಿ ಸೇರಿದಾಗ ಬಿಜೆಪಿಯ ಎನ್‌. ರವಿ ಕುಮಾರ್‌ ಮಾತು ಆರಂಭಿಸಿದರು.

ʻʻನಿನ್ನೆ ವಿಧಾನ ಸೌಧದಲ್ಲಿ ನಡೆದ ಘಟನೆ ಬಗ್ಗೆ ಮನೆಯಲ್ಲಿ ಚರ್ಚೆ ಆಗುತ್ತಿದೆ. ನಮ್ಮ ಅಭ್ಯರ್ಥಿ ಗೆದ್ದ ವೇಳೆ ಇರಬಹುದು, ಕಾಂಗ್ರೆಸ್ ನ ಅಜಯ್‌ ಮಾಕೆನ್‌ ಗೆದ್ದ ವೇಳೆ ಈ ತರಹ ಘೋಷಣೆ ಕೂಗಿಲ್ಲ. ನಾಸಿರ್ ಹುಸೇನ್ ವಿಜಯೋತ್ಸವದ ವೇಳೆ ಈ ರೀತಿಯ ಘೋಷಣೆ ಕೂಗಿದ್ದಾರೆ. ವಿಧಾನ ಸೌಧದಲ್ಲಿ ನೂರಾರು ಅಧಿಕಾರಿಗಳ ಇದ್ದ ವೇಳೆ ಪಾಕಿಸ್ತಾನದ ಪರ ಘೋಷಣೆ ಕೂಗಿದ್ದಾರೆ. ಇದು ಸಂವಿಧಾನಕ್ಕೆ ಮಾಡಿದ ಅವಮಾನ. ವಿಭಜನೆ ಆಗಿರುವ ಪಾಕಿಸ್ತಾನ ಪರ ಘೋಷಣೆ ಕೂಗುವುದು ಎಷ್ಟು ಸರಿ? ದೇಶವೇ ತಲೆ ತಗ್ಗಿಸುವ ಕೆಲಸʼʼ ಎಂದು ರವಿ ಕುಮಾರ್‌ ಹೇಳಿದರು.

ರವಿಕುಮಾರ್ ಮಾತನಾಡುವ ವೇಳೆ ಕಾಂಗ್ರೆಸ್ ಯುಬಿ ವೆಂಕಟೇಶ್ ʻʻನೀವೆ ಕಳುಹಿಸಿ ಕೊಟ್ಟಿದ್ರಿ ಅನ್ಸುತ್ತೆʼʼ ಎಂದು ಕೆಣಕಿದರು. ಆಗ ರವಿ ಕುಮಾರ್‌ ಅವರು ಚರ್ಚೆಯ ನಡುವೆ, ಕಾಂಗ್ರೆಸ್ ಸರ್ಕಾರವನ್ನು ದೇಶ ದ್ರೋಹಿ ಎಂದರು.

ರವಿ ಕುಮಾರ್‌ ಅವರ ಮಾತಿಗೆ ಕಾಂಗ್ರೆಸ್ ಸದಸ್ಯರು ‌ತೀವ್ರ ವಿರೋಧ ವ್ಯಕ್ತಪಡಿಸಿದರು. ದೇಶ ದ್ರೋಹಿ ಸರ್ಕಾರ ಎಂದ ಬಿಜೆಪಿ ಸದಸ್ಯರಿಗೆ ʻʻನಿಮ್ಮ ಕೇಂದ್ರ ಸರ್ಕಾರಕ್ಕೆ ಹೇಳಿ ನಮ್ಮ ಸರ್ಕಾರದ ಮೇಲೆ ಕೇಸ್ ಬುಕ್ ಮಾಡಿʼʼ ಎಂದು ಕಾಂಗ್ರೆಸ್ ಸದಸ್ಯ ಬಿ.ಕೆ. ಹರಿಪ್ರಸಾದ್‌ ಸವಾಲು ಹಾಕಿದರು.

ಆಗ ಸದನದಲ್ಲಿ ಮತ್ತೆ ಗದ್ದಲ ಹೆಚ್ಚಾಯಿತು. ಈ ನಡುವೆ ರವಿಕುಮಾರ್ ಮಾತನಾಡುವ ವೇಳೆ ಕಾಂಗ್ರೆಸ್‌ನ ಅಬ್ದುಲ್‌ ಜಬ್ಬಾರ್‌ ಬಾಯಿ ಮುಚ್ಚು ಎಂದು ಹೇಳಿದರು.

ಇದರಿಂದ ಸಿಟ್ಟುಗೊಂಡ ರವಿ ಕುಮಾರ್‌ ತಮ್ಮ ಜಾಗದಿಂದ ಎದ್ದು ಸದನದ ಬಾವಿ ಬಳಿ ಹೋದರು, ಬಿಜೆಪಿ ಸದಸ್ಯರು ಜೈ ಶ್ರೀರಾಮ್ ಎಂದು ಘೋಷಣೆ ಕೂಗಿದರು. ಅದಕ್ಕೆ ಭಾರತ್ ಮಾತಾಕಿ ಜೈ ಎಂದು ಕಾಂಗ್ರೆಸ್ ಸದಸ್ಯರು ಪ್ರತಿ ಘೋಷಣೆ ಕೂಗಿದರು.

ಅವನ ಬಾಯಿ ಬಂದ್‌ ಮಾಡಿ ಎಂದು ರವಿ ಕುಮಾರ್‌ ವಿರುದ್ಧ ಜಬ್ಬಾರ್‌ ಆಡಿದ ಮಾತು ಬಿಜೆಪಿ ಸದಸ್ಯರನ್ನು ರೊಚ್ಚಿಗೆಬ್ಬಿಸಿತು. ಎಲ್ಲರೂ ಸದನದ ಬಾವಿ ಬಳಿ ಹೋದರು. ಏಕ ವಚನ ಮಾತಾಡಿದರೆ ಸರಿ ಇರಲ್ಲ ಎಂದು ರವಿಕುಮಾರ್ ಎದ್ದು ಹೋದರು. ರವಿಕುಮಾರ್ ಜೊತೆಗೆ ತುಳಸಿ ಮುನಿರಾಜು ಗೌಡ ಮುನ್ನುಗ್ಗಿ ಹೋಗಿ ವಾರ್ನಿಂಗ್ ಕೊಟ್ಟರು. ಆಗ ಸ್ಪೀಕರ್ ಖುರ್ಚಿ ಎದುರು ಕೈಕೈ ಮಿಲಾಯಿಸುವ ಹಂತ ಸೃಷ್ಟಿಯಾಯಿತು. ಆಗ ಮಾರ್ಷಲ್‌ಗಳು ಬಂದು ಎಲ್ಲರನ್ನೂ ಬಿಡಿಸಿದರು.

ಸದನವನ್ನು 10 ನಿಮಿಷಗಳ ಕಾಲ ಮುಂದೂಡಿದ ಸಭಾಪತಿ ಮರಳಿ ಸೇರಿದಾಗ ಕಠಿಣ ಎಚ್ಚರಿಕೆ ನೀಡಿದರು. ʻʻಇನ್ನೊಮ್ಮೆ ಸದನದಲ್ಲಿ ಯಾರಾದರೂ ಬೇಕಾಬಿಟ್ಟಿ ಮಾತಡಿದರೆ ನಾನು ಸಹಿಸಲ್ಲ. ಸಭಾಪತಿ ಹೇಳಿದ್ರೂ ಕೇಳುವುದಿಲ್ಲ ಅಂದ್ರೆ ಏನರ್ಥʼʼ ಎಂದರು. ಇನ್ನೊಮ್ಮೆ ಸದನದಲ್ಲಿ ಏಕ ವಚನದಲ್ಲಿ‌ ಮಾತನಾಡದಂತೆ ಎಲ್ಲಾ ಸದಸ್ಯರಿಗೂ ಎಚ್ಚರಿಕೆ ಕೊಟ್ಟರು.

ಇದನ್ನೂ ಓದಿ : Budget session : ಉಭಯ ಸದನಗಳಲ್ಲಿ ಜಿಂದಾಬಾದ್‌ ಕೋಲಾಹಲ ; ಭಾರತ್‌ ಮಾತಾಕಿ ಜೈ ಘೋಷಣೆ

ಪಾಕ್‌ ಪರ ಘೋಷಣೆ ಸುಳ್ಳಿನ ಸೃಷ್ಟಿ ಎಂದ ಎಚ್‌ಕೆ ಪಾಟೀಲ್‌; ಪರಿಷತ್‌ನಲ್ಲೂ ಕೋಲಾಹಲ

ವಿಧಾನ ಪರಿಷತ್‌ ಕಲಾಪ ಜಿಂದಾಬಾದ್‌ ಘೋಷಣೆಯಿಂದಲೇ ಆರಂಭವಾಗಿತ್ತು. ಬಿಜೆಪಿ ಸದಸ್ಯರು ಭಾರತ್‌ ಮಾತಾಕಿ ಘೋಷಣೆ ಕೂಗಿದರೆ ಕಾಂಗ್ರೆಸ್‌ ಸದಸ್ಯರೂ ಅದೇ ಘೋಷಣೆ ಮೊಳಗಿಸಿದರು.

ಕಾಂಗ್ರೆಸ್ ಸರ್ಕಾರ ವಜಾ ಮಾಡುವಂತೆ ಬಿಜೆಪಿ ಸದಸ್ಯರು ಒತ್ತಾಯಿಸಿದ ಹಿನ್ನೆಲೆಯಲ್ಲಿ ಸಭಾಪತಿ ಬಸವರಾಜ ಹೊರಟ್ಟಿ ಸದನವನ್ನು ಐದು ನಿಮಿಷಗಳ ಕಾಲ ಮುಂದೂಡಿದರು.

ಮತ್ತೆ ಕಲಾಪ ಆರಂಭವಾಗುತ್ತಿದ್ದಂತೆಯೇ ಬಿಜೆಪಿಯ ಕೋಟ ಶ್ರೀನಿವಾಸ್ ಪೂಜಾರಿ ವಿಷಯ ಪ್ರಸ್ತಾಪಿಸಿದರು. ಆಗ ಕಾಂಗ್ರೆಸ್‌ನ ಸಲೀಂ ಅಹಮದ್ನೊ ಟೀಸ್ ನೀಡದೇ ವಿಷಯ ಪ್ರಸ್ತಾಪ ಮಾಡಬಾರದು ಎಂದು ಆಕ್ಷೇಪ ಮಾಡಿದರು.

ಆಗ ಕೋಟ ಶ್ರೀನಿವಾಸ ಪೂಜಾರಿ ಅವರು, ವಿಧಾನಸೌಧದಲ್ಲೇ ರಾಷ್ಟ್ರ ವಿರೋಧಿ ಘೋಷಣೆ ಕೂಗಿದ್ದಾರೆ. ವಿಧಾನಸೌಧದಲ್ಲೇ ಪಾಕಿಸ್ತಾನ ಪರ ಘೋಷಣೆ ಕೂಗಿದ್ದಾರೆ. ಆಗ ಎಲ್ಲಿ ಹೋಗಿದ್ದೀರಿ ಎಂದು ಕೇಳಿದರು. ಅದಕ್ಕೆ ಸಲೀಂ ಅಹಮದ್‌ ಅವರು ಯಾರೂ ಅಂಥ ಘೋಷಣೆ ಕೂಗಿಲ್ಲ ಎಂದರು.

ಮೇಲ್ಮನೆ ಸದಸ್ಯ ಎಚ್.ಕೆ. ಪಾಟೀಲ್‌ ಅವರು ಕೂಡಾ ಚುನಾವಣಾ ಸಂದರ್ಭದಲ್ಲಿ ಯಾವ ಅಭ್ಯರ್ಥಿ ಗೆದ್ದಿರುತ್ತಾನೋ ಆ ಅಭ್ಯರ್ಥಿ ಪರ ಘೋಷಣೆ ಕೂಗ್ತಾರೆ. ಪಾಕಿಸ್ತಾನ ಘೋಷಣೆ ಸುಳ್ಳಿ ಸೃಷ್ಟಿ ಎಂದರು. ಇದಕ್ಕೆ ಬಿಜೆಪಿ ಸದಸ್ಯರು ಕಿಡಿ ಕಾರಿದರು.

ಇದಕ್ಕೆ ಉತ್ತರ ನೀಡಿದ ಎಚ್ಕೆ ಪಾಟೀಲ್, ನನಗೆ ಕೇಳಿದ್ದನ್ನು ಹೇಳಿದ್ದೇನೆ. ಇದರಾಚೆಗೆ ಘೋಷಣೆ ಕೇಳಿದ್ದರೆ ದೂರು ನೀಡಿದ್ದೀರಿ ಕಾನೂನಾತ್ಮಕ ಕ್ರಮ ಕೈಗೊಳ್ತೇವೆ ಎಂದರು.

ಆಗ ಕೋಟ ಶ್ರೀನಿವಾಸ ಪೂಜಾರಿ ಅವರು, ಸರ್ಕಾರಕ್ಕೆ ನಾಚಿಕೆ ಆಗೋದಿಲ್ವಾ? ಸರ್ಕಾರಕ್ಕೆ ನಾಚಿಕೆ ಅನ್ನೋದೇ ಇಲ್ವಾ? ಸಿಎಂ ಬಂದು ಇಲ್ಲಿ ಉತ್ತರ ಕೊಡಬೇಕು. ಇಡೀ ರಾಜ್ಯಕ್ಕೆ ಕೇಳಿದ ಘೋಷಣೆ ಸರ್ಕಾರಕ್ಕೆ ಕೇಳಿಲ್ವಾ? ಕಾಂಗ್ರೆಸ್ ಧೋರಣೆ ಪಾಕಿಸ್ತಾನ ಪರವೋ ಯಾರ ಪರ? ಎಂದು ಕೇಳಿದರು.

ಆಗ ಬಿ.ಕೆ ಹರಿಪ್ರಸಾದ್‌, ಪಾಕಿಸ್ತಾನಕ್ಕೆ ಹೋಗಿ ಬಿರಿಯಾನಿ ತಿಂದಿದ್ದು ಯಾರು? ಎಂದು ತಿವಿದರು. ಇದರಿಂದ ಮತ್ತಷ್ಟು ಕೆರಳಿದ ಕೋಟ ಶ್ರೀನಿವಾಸ ಪೂಜಾರಿ ಅವರು, ಈ ಸರ್ಕಾರದಂತ ಕೆಟ್ಟ ಸರ್ಕಾರ ಇಲ್ಲ. ಪಾಕಿಸ್ತಾನ ಘೋಷಣೆ ಕೂಗಿದವರ ಪರ ದಾಖಲೆ ಹುಡುಕ್ತಿದ್ದೀರ? ಇಂಥ ಸರ್ಕಾರ ಬೇರೆ ಕಡೆ ಇದ್ದಿದ್ದರೆ ವಜಾ ಆಗ್ತಿತ್ತು.
ಸಿಎಂ ರಾಜೀನಾಮೆ ನೀಡಬೇಕು ಎಂದರು. ಆಗ ಸದನವನ್ನು ಮುಂದಕ್ಕೆ ಹಾಕಲಾಯಿತು.

ಕ್ಷಣ ಕ್ಷಣದ ಮಾಹಿತಿಗಾಗಿ Vistara News FaceBook ಪೇಜ್ ಫಾಲೋ ಮಾಡಿ
ಮಹತ್ವದ ಮಾಹಿತಿಗಾಗಿ ವಿಸ್ತಾರ ನ್ಯೂಸ್ ಆ್ಯಪ್ ಉಚಿತವಾಗಿ ಡೌನ್ ಲೋಡ್ ಮಾಡಿಕೊಳ್ಳಿ: Andriod App | IOS App

ವಿಧಾನಮಂಡಲ ಅಧಿವೇಶನ

Budget Session : ಬಿಜೆಪಿಯ ಜೈ ಶ್ರೀರಾಮ್‌ VS ಸಿದ್ದರಾಮಯ್ಯರ ಜೈ ಸೀತಾರಾಮ್‌!

Budget Session : ರಾಜ್ಯ ವಿಧಾನಸಭೆಯಲ್ಲಿ ಗುರುವಾರ ಬಿಜೆಪಿ ಮತ್ತು ಸಿಎಂ ಸಿದ್ದರಾಮಯ್ಯ ನಡುವೆ ವಾರ್‌ ನಡೆಯಿತು. ಅದು ದೇಶಪ್ರೇಮ, ದೇಶದ್ರೋಹ ಹಾಗೂ ಜೈ ಶ್ರೀರಾಮ್‌, ಜೈ ಸೀತಾರಾಮ್‌ ಫೈಟ್‌

VISTARANEWS.COM


on

Budget session Siddaramaiah
Koo

ಬೆಂಗಳೂರು: ರಾಜ್ಯ ವಿಧಾನಸಭೆಯಲ್ಲಿ (Budget Session) ಗುರುವಾರ ಬಿಜೆಪಿಯ ಜೈ ಶ್ರೀರಾಮ್‌ (Jai Shri Ram Slogan) ಘೋಷಣೆಗೆ ಸಿಎಂ ಸಿದ್ದರಾಮಯ್ಯ (CM Siddaramiah) ಅವರು ಜೈ ಸೀತಾರಾಮ್‌ (Jai Seetharam) ಘೋಷಣೆಯ ಮೂಲಕ ಸಡ್ಡು ಹೊಡೆದರು!

ಬುಧವಾರ ಬಜೆಟ್‌ ಅಧಿವೇಶನದಲ್ಲಿ ವಿಧಾನಸಭೆ ಕಲಾಪ ಆರಂಭವಾಗುತ್ತಿದ್ದಂತೆಯೇ ವಿಧಾನಸೌಧದ ಎದುರು ನಡೆದ ʻಪಾಕಿಸ್ತಾನ್‌ ಜಿಂದಾಬಾದ್‌ʼ (Pakistan Zindabad) ವಿವಾದದ ಬಗ್ಗೆ ವಿರೋಧ ಪಕ್ಷದ ನಾಯಕ ಆರ್‌ ಅಶೋಕ್‌ ಧ್ವನಿ ಎತ್ತಿದರು. ದೇಶದ್ರೋಹಿಗಳ ವಿರುದ್ಧ ಕ್ರಮ ಕೈಗೊಳ್ಳದೆ ‌ ಸರ್ಕಾರ ವಿಳಂಬ ಮಾಡುತ್ತಿದೆ. ಕೆಲವರನ್ನು ಕರೆಸಿ ವಿಚಾರಣೆಯ ನೆಪದಲ್ಲಿ ಅವರಿಗೆ ಬಿರಿಯಾನಿ ತಿನ್ನಿಸುತ್ತಿದೆ ಎಂದು ಆರೋಪಿಸಿದರು. ಆಗ ಸಿದ್ದರಾಮಯ್ಯ ಅವರು ಸಿಟ್ಟಿಗೆದ್ದು ದೇಶಪ್ರೇಮದ ವಿಚಾರದಲ್ಲಿ ನಾವು ನಿಮ್ಮಿಂದ ಕಲಿಯಬೇಕಾಗಿಲ್ಲ. ಆರೆಸ್ಸೆಸ್‌ನವರು ಬ್ರಿಟಿಷರ ಜತೆ ಕೈಜೋಡಿಸಿದವರು. ಆರೆಸ್ಸೆಸ್‌ ಸ್ಥಾಪಕರಾದ ಕೇಶವ ಬಲಿರಾಮ ಹೆಡಗೇವಾರ್‌ ಅವರಾಗಲೀ, ನಂತರ ಸರಸಂಘಚಾಲಕರಾಗಿದ್ದ ಗೋಳ್ವಳ್ಕರ್‌ ಅವರಾಗಲೀ ಸ್ವಾತಂತ್ರ್ಯ ಹೋರಾಟದಲ್ಲಿ ಪಾಲ್ಗೊಂಡವರಲ್ಲ ಎಂದು ಹೇಳಿದರು.

ಆಗ ಬಿಜೆಪಿ ಶಾಸಕರು ಸದನದ ಬಾವಿಗಿಳಿದು ಪ್ರತಿಭಟನೆ ನಡೆಸಿದರು. ಬಾವಿಯ ಸುತ್ತ ಭಜನೆ ಮಾಡುವ ರೀತಿಯಲ್ಲಿ ಓಡಾಡಿದರು. ಕಾಂಗ್ರೆಸ್‌ ಸತ್ತೋಯ್ತು, ಚಟ್ಟ ಕಟ್ಟಿ ಎಂದೆಲ್ಲ ಭಜನೆ ಮಾಡುತ್ತಾ ಸಾಗಿದರು. ಜತೆಗೆ ಜೈ ಶ್ರೀರಾಮ್‌ ಘೋಷಣೆ ಮೊಳಗಿಸಿದರು. ಆಗ ಸಿದ್ದರಾಮಯ್ಯ ಅವರು ಜೈಶ್ರೀ ರಾಮ್‌ ಘೋಷಣೆಗೆ ಪ್ರತಿಯಾಗಿ ಜೈ ಸೀತಾರಾಮ್‌ ಘೋಷಣೆ ಕೂಗಿದರು. ಬಿಜೆಪಿಯವರು ರಾಮಾಯಣವನ್ನೂ ಓದಿಲ್ಲ, ಮಹಾಭಾರತವನ್ನೂ ಓದಿಲ್ಲ ಎಂದರು.

ನಾವೂ ರಾಮನ ಭಕ್ತರೇ ಎಂದ ಸಿದ್ದರಾಮಯ್ಯ

ಅವರು ಮಾತೆತ್ತಿದರೆ ಜೈಶ್ರೀರಾಮ್‌ ಅನ್ನುತ್ತಾರೆ. ನಾವೇನು ರಾಮನ ಭಕ್ತರಲ್ಲವೆ? ನಮ್ಮ ಊರಿನಲ್ಲಿ ಎರಡು ರಾಮ ಮಂದಿರ ಕಟ್ಟಿಸಿದ್ದೇನೆ. ನಾನು ರಾಮನ ಭಕ್ತನಲ್ಲವೇ? ಎಂದು ಸಿದ್ದರಾಮಯ್ಯ ಕೇಳಿದರು.

ಇವರು ರಾಮ- ಸೀತೆಯರನ್ನು ಬೇರೆ ಮಾಡಿದ್ದಾರೆ. ಅವರು ಜೈ ಶ್ರೀ ರಾಮ್‌ ಎನ್ನುತ್ತಾರೆ. ಅದಕ್ಕಾಗಿ ನಾವು ಜೈ ಸೀತಾರಾಮ್‌ ಎಂದು ಹೇಳುತ್ತೇವೆ. ಮಹಾತ್ಮಾ ಗಾಂಧೀಜಿ ಹೇಳಿದ ಸೀತಾರಾಮನಲ್ಲಿ ನಾವು ನಂಬಿಕೆ ಇಟ್ಟಿದ್ದೇವೆ ಎಂದು ಸಿದ್ದರಾಮಯ್ಯ ಹೇಳಿದರು.

ನಾವು ರಾಷ್ಟ್ರಭಕ್ತರು. ಈ ದೇಶದ ಜನರನ್ನು ಪ್ರೀತಿಸುವವರು. ಎಲ್ಲ ಧರ್ಮದ ಜನರನ್ನು ಪ್ರೀತಿಸುವವರು ಕಾಂಗ್ರೆಸ್‌ ಪಕ್ಷದವರು. ಇವರ ತರ ಬುರ್ಖಾ ಹಾಕಿದವರು, ಟೋಪಿ ಹಾಕಿದವರು ಬರಬೇಕಾಗಿಲ್ಲ ಎನ್ನುವುದಿಲ್ಲ ಎಂದು ಸಿದ್ದರಾಮಯ್ಯ ಅವರು ಬಿಜೆಪಿಯನ್ನು ಕೆಣಕಿದರು.

ಇದನ್ನು ಓದಿ : Budget Session : ನಮ್ಮ ಗ್ಯಾರಂಟಿ ಕದ್ದು ಮೋದಿ ಗ್ಯಾರಂಟಿ ಅಂತಿದಾರೆ; ಸಿದ್ದರಾಮಯ್ಯ ಆರೋಪ

ಬೆಲೆ ಏರಿಕೆ, ಸಂಕಷ್ಟಕ್ಕೆ ಗ್ಯಾರಂಟಿ ಉತ್ತರ

ಸಬ್‌ ಕಾ ಸಾಥ್‌ ಸಬ್‌ ಕಾ ವಿಕಾಸ್‌ ಎಂದವರು ಪೆಟ್ರೋಲ್‌ ಡೀಸೆಲ್‌ ಬೆಲೆ, ಗ್ಯಾಸ್‌ ಬೆಲೆ, ಅಗತ್ಯವಸ್ತುಗಳ ಬೆಲೆ ಏರಿಸಿದರು. ಬಡವರಿಗೆ ನಿರುದ್ಯೋಗ, ಬೆಲೆ ಏರಿಕೆಯಿಂದ ಸಂಕಷ್ಟಕ್ಕೆ ಒಳಗಾಗಿದ್ದಾರೆ. ಅವರಿಗೆ ನಾವು ಗ್ಯಾರಂಟಿ ಯೋಜನೆಗಳ ಮೂಲಕ ನಾಲ್ಕರಿಂದ ಐದು ಸಾವಿರ ರೂ. ಕೊಡ್ತಾ ಇದ್ದೀವಿ. 1.2 ಕೋಟಿ ರೂ. ಕುಟುಂಬಗಳು ಅಂದರೆ ಸುಮಾರು 4.5 ಕೋಟಿ ಜನರಿಗೆ ಕೊಡ್ತಾ ಇದ್ದೀವಿ. ಈಗ ಅವರು ನಮ್ಮನ್ನು ಕಾಪಿ ಮಾಡುತ್ತಿದ್ದಾರೆ. ಈಗ ಮೋದಿ ಗ್ಯಾರಂಟಿ ಎಂದು ಹೇಳುತ್ತಾರೆ ಎಂದು ಹೇಳಿದರು.

ಬರ ಪರಿಹಾರಕ್ಕೆ ಪ್ರಸ್ತಾವನೆ ಅಕ್ಟೋಬರ್‌ ನಲ್ಲಿಯೇ ಕಳಿಸಿದ್ದೆವು. ನೇರವಾಗಿ ಪ್ರಧಾನಮಂತ್ರಿಯವರು ಹಾಗೂ ಅಮಿತ್‌ ಷಾ ಅವರನ್ನು ಭೇಟಿ ಮಾಡಿದೆ. 240 ರಲ್ಲಿ 223 ತಾಲ್ಲೂಕುಗಳು ಬರಪೀಡಿತವಾಗಿವೆ ಎಂದು ಪರಿಹಾರ ನೀಡುವಂತೆ ಮನವಿ ಮಾಡಿದೆ. ಡಿಸೆಂಬರ್‌ 23ರಂದು ಸಭೆ ಕರೆಯುವುದಾಗಿ ಕೇಂದ್ರ ಸಚಿವರು ಹೇಳಿದರೂ ಈ ವರೆಗೆ ಸಭೆ ನಡೆಸಿಲ್ಲ.. ನಮ್ಮ ಸಂಸದರು ಈ ಬಗ್ಗೆ ಮೌನ ವಹಿಸಿದ್ದಾರೆ. ಕರ್ನಾಟಕದ ಜನ ಇವರನ್ನು ಮುಂಬರುವ ಚುನಾವಣೆಯಲ್ಲಿ ತಿರಸ್ಕರಿಸಬೇಕು ಎಂದು ಸಿದ್ದರಾಮಯ್ಯ ಹೇಳಿದರು.

ಕೇಂದ್ರ ಸರ್ಕಾರದಿಂದ ಹಣ ಬರುತ್ತದೆ ಎಂದು ಪದೇಪದೆ ಹೇಳುತ್ತಾರೆ. ಈ ಹಣ ಯಾರಿಂದ ಬರುತ್ತದೆ? ನಮ್ಮ ತೆರಿಗೆಯಿಂದ. ಆದ್ದರಿಂದಲೇ ನಾವು ಹೇಳುವುದು ನಮ್ಮ ತೆರಿಗೆ ನಮ್ಮ ಹಕ್ಕು. ಸೆಸ್‌, ಸರ್ಚಾರ್ಜ್‌ ನಲ್ಲಿ ನಮಗೆ ಪಾಲು ಕೊಡುವುದಿಲ್ಲ. ಸೆಸ್‌, ಸರ್ಚಾರ್ಜ್‌ ಮೂಲ 5,52,000 ಕೋಟಿ ರೂ. ಸಂಗ್ರಹವಾಗಿದೆ. ಸೆಸ್‌ ಸರ್ಚಾರ್ಜ್‌ 1958 ರಿಂದ ವಿಧಿಸಲಾಗುತ್ತಿದೆ ಎಂದು ಬೊಮ್ಮಾಯಿ ಅವರು ಹೇಳಿದ್ದಾರೆ. ಆದರೆ 1999 ರ ವರೆಗೆ ಸೆಸ್‌ ಸರ್ಚಾರ್ಜ್‌ ನಲ್ಲಿ ರಾಜ್ಯಕ್ಕೆ ಪಾಲು ದೊರೆಯುತ್ತಿದ್ದು. ಸಂವಿಧಾನ ತಿದ್ದುಪಡಿ ಮಾಡಿ ಇದನ್ನು ಸ್ಥಗಿತಗೊಳಿಸಲಾಯಿತು. ಕನಿಷ್ಠ ತೆರಿಗೆಯ 50% ಆದರೂ ನಮಗೆ ಕೊಡಬೇಕು. 4.71% ರಿಂದ 3.64% ಗೆ ಕಡಿಮೆಯಾಗಿದೆ.. ಇದರ ಅರಿವಾಗಿಯೇ 15ನೇ ಹಣಕಾಸು ಆಯೋಗ ವಿಶೇಷ ಅನುದಾನಕ್ಕೆ ಶಿಫಾರಸು ಮಾಡಿದ್ದು ಎಂದು ವಿವರಿಸಿದರು.

ಎರಡು ವರ್ಷದಲ್ಲಿ ಉಳಿತಾಯ ಬಜೆಟ್: ಸಿಎಂ ಭರವಸೆ

ರಾಜ್ಯ ಸರ್ಕಾರ ಒಂದೇ ಒಂದು ಬಾರಿ 2020-21ರಲ್ಲಿ ಶೇ. 3ರ ಮಿತಿ ದಾಟಿದೆ. ಇನ್ನು ಎರಡು ವರ್ಷದಲ್ಲಿ ಆಯವ್ಯಯವನ್ನು ರಾಜಸ್ವ ಉಳಿತಾಯಕ್ಕೆ ತಂದೇ ತರುವುದಾಗಿ ಸದನಕ್ಕೆ ಭರವಸೆ ನೀಡುತ್ತೇನೆ. 2018 ರಲ್ಲಿ ನನ್ನ ಅವಧಿಯ ಮುಕ್ತಾಯದ ವೇಳೆ 2.42 ಲಕ್ಷ ಕೋಟಿ ಸಾಲ ಇದ್ದು, 2023 ಮಾರ್ಚ್‌ ವೇಳೆಗೆ 5.23 ಲಕ್ಷ ಕೋಟಿ ಇದೆ. ಇವರು ನಾಲ್ಕು ವರ್ಷದಲ್ಲಿ 2,81,00 ಕೋಟಿ ರೂ. ಮಾಡಿದ್ದಾರೆ. ಇದಲ್ಲದೇ ಜಿ.ಎಸ್.ಟಿ. ಪರಿಹಾರ ಸಾಲ 3,000 ಕೋಟಿ ರೂ. ಮಾಡಿದ್ದಾರೆ ಎಂದು ಹೇಳಿದರು.

Continue Reading

ವಿಧಾನಮಂಡಲ ಅಧಿವೇಶನ

Budget Session : ನಮ್ಮ ಗ್ಯಾರಂಟಿ ಕದ್ದು ಮೋದಿ ಗ್ಯಾರಂಟಿ ಅಂತಿದಾರೆ; ಸಿದ್ದರಾಮಯ್ಯ ಆರೋಪ

Budget Session : ಕೇಂದ್ರ ಸರ್ಕಾರದವರು ರಾಜ್ಯದ ಗ್ಯಾರಂಟಿ ಯೋಜನೆಗಳನ್ನು ಕದ್ದು ತಮ್ಮ ಯೋಜನೆ ಅಂತಿದಾರೆ ಎಂದು ಸಿಎಂ ಸಿದ್ದರಾಮಯ್ಯ ಹೇಳಿದ್ದಾರೆ. ವಿಧಾನಸಭೆಯಲ್ಲಿ ಅವರು ಮಾತನಾಡಿದರು.

VISTARANEWS.COM


on

Budget session Siddaramaiah Modi guarantee
Koo

ಬೆಂಗಳೂರು: ಕೇಂದ್ರ ಸರ್ಕಾರ ನಮ್ಮ ಗ್ಯಾರಂಟಿಗಳನ್ನು (Congress Guarantees) ಕದ್ದು ಮೋದಿ ಗ್ಯಾರಂಟಿ (Modi Guarantee) ಎಂದು ಪ್ರಚಾರ ಮಾಡುತ್ತಿದೆ ಎಂದು ಸಿಎಂ ಸಿದ್ದರಾಮಯ್ಯ (CM Siddaramiah) ಆರೋಪಿಸಿದ್ದಾರೆ. ರಾಜ್ಯ ವಿಧಾನಸಭೆಯಲ್ಲಿ (Budget Session) ಬಜೆಟ್‌ ಮೇಲಿನ ಚರ್ಚೆಗೆ ಉತ್ತರ ನೀಡಿದ ಅವರು, ಕೇಂದ್ರ ಸರ್ಕಾರದ ಯೋಜನೆಗಳಲ್ಲಿ (Central Government Schemes) ರಾಜ್ಯದ ಪಾಲೇ ಅಧಿಕವಿರುತ್ತದೆ ಎಂದು ಲೆಕ್ಕ ನೀಡಿದರು.

ನಾಡಿನ ಜನರಿಗೆ ಮಾಡಿರುವ ಅನ್ಯಾಯವನ್ನು ಸಮರ್ಥನೆ ಮಾಡುವ ಬಿಜೆಪಿ ನಾಯಕರಿಗೆ ಮೋದಿ ಮುಂದೆ ನಾಡಿನ ಹಕ್ಕನ್ನು, ನಾಡಿನ ಜನರ ಪಾಲನ್ನು ಕೇಳುವ ತಾಕತ್ತಿಲ್ಲ ಎಂದು ಸಿಎಂ ಸಿದ್ದರಾಮಯ್ಯ ಆಕ್ಷೇಪಿಸಿದರು.

ರಾಜ್ಯದ ಸ್ವಂತ ತೆರಿಗೆ ಶೇ 78% ಇದ್ದರೆ 22% ಕೇಂದ್ರ ಸರ್ಕಾರದಿಂದ ಬರುತ್ತದೆ. ಅದೇ ಗುಜರಾತಿಗೆ 75% ಸ್ವಂತ ತೆರಿಗೆ ಯಿಂದ ಬಂದರೆ 17% ಕೇಂದ್ರದಿಂದ ಹಾಗೂ ಸಹಾಯಧನ ಸೇರಿ 25% ಕೇಂದ್ರದಿಂದ ಹೋಗುತ್ತಿದೆ. ಉತ್ತರ ಪ್ರದೇಶಕ್ಕೆ 48% ಸ್ವಂತ ತೆರಿಗೆ ಇದ್ದರೆ 32% ಹಾಗೂ 20% ಸೇರಿ ಒಟ್ಟು 52% ಕೇಂದ್ರದಿಂದ ಹೋಗುತ್ತಿದೆ. ಆದರೆ ನಮಗೆ ಮಾತ್ರ ಕೇವಲ ಕೇವಲ ಕೇವಲ ಶೇ. 22% ಕೊಡುತ್ತಿದ್ದಾರೆ ಎಂದು ಅಸಮಾಧಾನ ವ್ಯಕ್ತಪಡಿಸಿದರು.

ನಮ್ಮಿಂದ ಪಡೆದ ಹಣ ನ್ಯಾಯಯುತವಾಗಿ ವಾಪಸ್‌ ಕೊಡುವುದಿಲ್ಲ

ದೇಶದಲ್ಲಿ ಸ್ವಂತ ತೆರಿಗೆ ಹೆಚ್ಚಿರುವ ರಾಜ್ಯಗಳ ಪೈಕಿ ಕರ್ನಾಟಕ ಮೊದಲ ಸ್ಥಾನದಲ್ಲಿದೆ. ಕರ್ನಾಟಕದಲ್ಲಿ ಶಿಕ್ಷಣ, ಆರೋಗ್ಯ, ಸೇತುವೆ, ಸಾಮಾಜಿಕ ಭದ್ರತೆ, ಕಾನೂನು ಸುವ್ಯವಸ್ಥೆ ನಿರ್ವಹಣೆಗೆ ಕೇಂದ್ರದಿಂದ ಪಾಲು ಬರುತ್ತದೆ. ರೈಲ್ವೇಗೆ ಜಮೀನು ಕೊಟ್ಟು ಯೋಜನಾ ವೆಚ್ಚದಲ್ಲಿ ಶೇ. 50ರಷ್ಟು ರಾಜ್ಯ ಸರ್ಕಾರ ಭರಿಸುತ್ತದೆ. ರೈಲ್ವೆ ಇಂದ ಬಂದ ಆದಾಯವನ್ನು ಅವರೇ ಇಟ್ಟುಕೊಳ್ಳುತ್ತಾರೆ. ಟೋಲ್ ಸಂಗ್ರಹದಿಂದ ಬರುವ ಆದಾಯವನ್ನೂ ನಮ್ಮ ನಾಡಿನ ಜನರಿಗೆ ವಾಪಾಸ್ ಕೊಡುವುದಿಲ್ಲ ಎಂದು ರಾಜ್ಯಗಳಿಗೆ ತೆರಿಗೆಯಲ್ಲಿ ಆಗುತ್ತಿರುವ ಅನ್ಯಾಯದ ಪಟ್ಟಿಯನ್ನೇ ಸಿದ್ದರಾಮಯ್ಯ ನೀಡಿದರು.

ಕೇಂದ್ರ ಪುರಸ್ಕೃತ ಯೋಜನೆಗಳಲ್ಲೂ ರಾಜ್ಯದ ಪಾಲೇ ಅಧಿಕ

ಕೇಂದ್ರ ಸರ್ಕಾರದ ಬಜೆಟ್ ಗಾತ್ರ 45 ಲಕ್ಷ ಕೋಟಿ ರೂ.ಗಳಿದ್ದರೂ ನಮಗೆ 50257 ಕೋಟಿ ರೂ.ಗಳನ್ನು ಮಾತ್ರ ಕೊಟ್ಟಿದ್ದಾರೆ. ಅದರಲ್ಲಿ 13 ಸಾವಿರ ಕೋಟಿ ಕೇಂದ್ರ ಪುರಸ್ಕೃತ ಯೋಜನೆಗಳೂ ಸೇರಿವೆ ಎಂದರು.
ಅದರಲ್ಲಿಯೂ ಕೇಂದ್ರದ ಪಾಲು ಕಡಿಮೆ ಇದ್ದು, ನಮ್ಮ ಪಾಲು ಹೆಚ್ಚಿದೆ ಎಂದರು. 2013 ಮಾರ್ಚ್ ವರೆಗೆ 2067 ಕಿಮೀ ರಸ್ತೆಗಳಾಗಿವೆ. ಬೇರೆ ರಾಜ್ಯಗಳಲ್ಲಿ ಇದಕ್ಕಿಂತ ಹೆಚ್ಚಾಗಿದ್ದು, ಇಲ್ಲಿಯೂ ರಾಜ್ಯಕ್ಕೆ ಅನ್ಯಾಯವಾಗಿದೆ ಎಂದರು.

ಸರ್ವಶಿಕ್ಷಣ ಅಭಿಯಾನದಡಿ 702 ಕೋಟಿ ರೂ. ಕೇಂದ್ರ ಸರ್ಕಾರ ಕೊಟ್ಟರೆ ನಮ್ಮ.ಪಾಲು 472 ಕೋಟಿ ರೂ. ಕರ್ನಾಟಕ ಸರ್ಕಾರ ಹೆಚ್ಚುವರಿಯಾಗಿ 1528 ಕೋಟಿ ರೂ.ಗಳನ್ನು ನೀಡಿದೆ. ಮಧ್ಯಾಹ್ನದ ಬಿಸಿಯೂಟದಡಿ 594 ಕೋಟಿ ಕೇಂದ್ರ ಕೊಟ್ಟರೆ ರಾಜ್ಯ ಸರ್ಕಾರ 346 ಕೋಟಿ ರೂ. ನೀಡಿ ಹೆಚ್ಚುವರಿಯಾಗಿ 967 ಕೋಟಿ ರೂ.ಗಳನ್ನು ನೀಡಿದೆ. ಆಯುಷ್ಮಾ ನ್ ಭಾರತ್ ಯೋಜನೆಯಡಿ 187 ಕೋಟಿ ರೂ.ಗಳನ್ನು ಕೇಂದ್ರ ನೀಡಿದ್ದರೆ 124 ಕೋಟಿ ರೂ ಜೊತೆಗೆ 624 ಕೋಟಿ ರೂ.ಗಳನ್ನು ಹೆಚ್ಚುವರಿಯಾಗಿ ನೀಡಿದೆ.

ಇದನ್ನೂ ಓದಿ : Budget Session : ಹೆಡಗೇವಾರ್‌ ಸ್ವಾತಂತ್ರ್ಯಕ್ಕೆ ಹೋರಾಡಿದ್ರಾ? ಗೋಲ್ವಲ್ಕರ್‌ ಭಾಗವಹಿಸಿದ್ರಾ; ಸಿಎಂ ಪ್ರಶ್ನೆ

ಕೇಂದ್ರದವರು ನಮ್ಮ ಗ್ಯಾರಂಟಿ ಕದ್ದಿದ್ದಾರೆ ಎಂದ ಸಿದ್ದರಾಮಯ್ಯ

ಸಾಮಾಜಿಕ ಭದ್ರತಾ ಯೋಜನೆಯಡಿ ಕೇಂದ್ರ ಸರ್ಕಾರ 525 ಕೋಟಿ ರೂ. ನೀಡಿದರೆ, ರಾಜ್ಯ ಸರ್ಕಾರ 350 ಕೋಟಿ ನೀಡಿದೆ ಅದರ ಜೊತೆಗೆ 8569 ಕೋಟಿ ರೂ.ಗಳನ್ನು ಹೆಚ್ಚುವರಿಯಾಗಿ ಕೊಟ್ಟಿದೆ. ಒಟ್ಟಾರೆಯಾಗಿ 13005 ಕೋಟಿ ರೂ.ಗಳು ಕೇಂದ್ರ ಪುರಸ್ಕೃತ ಯೋಜನೆಗಳಿಗೆ ಬರುತ್ತದೆ ಅಷ್ಟೇ ಎಂದು ಮುಖ್ಯಮಂತ್ರಿಗಳು ವಿವರಿಸಿದರು.

ಪಿಎಂ ಕೃಷಿ ಸಿಂಚಯಿ ಯೋಜನೆಯಡಿ 57% ಕೇಂದ್ರ ಸರ್ಕಾರ ಹಾಗೂ 33% ರಾಜ್ಯ ಸರ್ಕಾರ ನೀಡುತ್ತದೆ ಅದರ ಜೊತೆ ಶೇ. 35ರಷ್ಟು ಹೆಚ್ಚುವರಿ ಮೊತ್ತವನ್ನು ರಾಜ್ಯ ಸರ್ಕಾರ ನೀಡುತ್ತದೆ. ಪಿಎಂ ಆವಾಸ್ ಯೋಜನೆಯಡಿ 5-6 ಲಕ್ಷ ರೂ. ರಾಜ್ಯ ಸರ್ಕಾರ ನೀಡಿದರೆ, ಕೇಂದ್ರ 1.50.ಲಕ್ಷ ರೂ. ನೀಡುತ್ತದೆ. ಅದರ ಜೊತೆಗೆ 1.38 ಲಕ್ಷ ಜಿಎಸ್‌ಟಿ ಸೇರಿ ಒಂದು ಮನೆಗೆ ಕೇಂದ್ರ ಸರ್ಕಾರ ನೀಡುವುದು ಕೇವಲ 12 ಸಾವಿರ ರೂ ಮಾತ್ರ ಎಂದರು. ಇದರಲ್ಲಿ ನಮ್ಮ ಹೆಸರಿಲ್ಲ. ಇದು ಯಾವ ನ್ಯಾಯ ಎಂದು ಪ್ರಶ್ನಿಸಿದ ಸಿಎಂ ಮೋದಿ ಗ್ಯಾರಂಟಿ ಎಂದು ನಮ್ಮ ಗ್ಯಾರಂಟಿ ಕದ್ದಿದ್ದಾರೆ ಎಂದರು.

Continue Reading

ರಾಜಕೀಯ

Budget Session : 40 ಗಂಟೆ ಕಳೆದರೂ ಜಿಂದಾಬಾದ್‌ ಉಗ್ರರ ಸೆರೆ ಇಲ್ಲ; ಬಿಜೆಪಿ ವಾಕೌಟ್‌

Budget Session : ಪಾಕಿಸ್ತಾನ್‌ ಜಿಂದಾಬಾದ್‌ ಘೋಷಣೆ ಕೂಗಿದ ಉಗ್ರರನ್ನು 40 ಗಂಟೆಗಳ ಆದರೂ ಬಂಧಿಸಿಲ್ಲ ಎಂದು ಆಕ್ರೋಶ ವ್ಯಕ್ತಪಡಿಸಿದ ಬಿಜೆಪಿ ಶಾಸಕರು ವಿಧಾನಭೆಯಿಂದ ಸಭಾತ್ಯಾಗ ಮಾಡಿದರು.

VISTARANEWS.COM


on

Budget Session BJP Walk out
Koo

ಬೆಂಗಳೂರು: ರಾಜ್ಯಸಭಾ ಚುನಾವಣೆಯಲ್ಲಿ (Rajyasabha Election) ಗೆದ್ದ ಕಾಂಗ್ರೆಸ್‌ ಅಭ್ಯರ್ಥಿಗಳ ವಿಜಯೋತ್ಸವದ ಸಂದರ್ಭದಲ್ಲಿ ಪಾಕಿಸ್ತಾನ್‌ ಜಿಂದಾಬಾದ್‌ (Pakistan zindabad) ಘೋಷಣೆ ಕೂಗಿದ ಧೂರ್ತರ ವಿರುದ್ಧ 40 ಗಂಟೆ ಕಳೆದರೂ ಕ್ರಮ ಕೈಗೊಂಡಿಲ್ಲ. ಅವರಿಗೆ ರಕ್ಷಣೆ ಕೊಡಲಾಗುತ್ತಿದೆ ಎಂದು ಆಪಾದಿಸಿ ಬಿಜೆಪಿ ರಾಜ್ಯ ವಿಧಾನಸಭೆಯಲ್ಲಿ ಸಭಾತ್ಯಾಗ (BJP Walks out from Assembly) ಮಾಡಿದೆ. ಬಜೆಟ್‌ ಅಧಿವೇಶನದ (Budget Session) ಕೊನೆಯ ದಿನವಾದ ಗುರುವಾರ ಮುಖ್ಯಮಂತ್ರಿ ಸಿದ್ದರಾಮಯ್ಯ (CM Siddaramaiah) ಅವರು ಚರ್ಚೆಯ ಮೇಲೆ ಉತ್ತರ ನೀಡುತ್ತಿದ್ದಾಗ ಬಿಜೆಪಿ ಶಾಸಕರು ಧರಣಿ ನಡೆಸಿದರು, ಭಜನೆ ನಡೆಸಿದರು. ಅಂತಿಮವಾಗಿ ವಿಪಕ್ಷ ನಾಯಕ ಆರ್‌. ಅಶೋಕ್‌ (R Ashok) ನೇತೃತ್ವದಲ್ಲಿ ಸಭಾತ್ಯಾಗ ನಡೆಸಿದರು. ಬಳಿಕ ಎಲ್ಲರೂ ರಾಜಭವನಕ್ಕೆ ತೆರಳಿದರು. ಅದರ ನಡುವೆ ಜೈ ಮೋದಿ, ಜೈ ಶ್ರೀರಾಮ್‌ ಘೋಷಣೆಗಳೂ ಮೊಳಗಿದವು.

ಅಧಿವೇಶನ ಸಮಾವೇಶಗೊಳ್ಳುತ್ತಿದ್ದಂತೆಯೇ ಮಾತನಾಡಿದ ವಿರೋಧ ಪಕ್ಷದ ನಾಯಕರಾದ ಆರ್‌ ಅಶೋಕ್‌ ಅವರು, ʻʻಈ ಸರ್ಕಾರ ಕುಂಭಕರ್ಣ ನಿದ್ರೆಯಲ್ಲಿದೆ. ಇನ್ನೂ ಅದು ಎದ್ದೇ ಇಲ್ಲ. ದೇಶದ್ರೋಹಿಗಳನ್ನು ಶಿಕ್ಷಿಸುವ ಧೈರ್ಯ ತೋರಿಲ್ಲʼʼ ಎಂದು ಆಕ್ಷೇಪಿಸಿದರು.

ʻʻನಾನು ಸಿನಿಯರ್ ಶಾಸಕನಾಗಿದ್ದೇನೆ. ಹಲವು ವರ್ಷಗಳಿಂದ ಸರ್ಕಾರಗಳನ್ನು ನೋಡಿದ್ದೇನೆ. ಮಲ್ಲಿಕಾರ್ಜುನ ಖರ್ಗೆಯವರು ಗೃಹ ಸಚಿವರಾಗಿದ್ದರು. ಆಗ ದಲಿತ ಸಮುದಾಯದ ಆರು ಜನರನ್ನ ಸಜೀವ ದಹನ ಮಾಡಲಾಗಿತ್ತು. ಆಗ ಸದನದಲ್ಲಿ ಖರ್ಗೆಯವರು ಕಣ್ಣೀರು ಹಾಕಿದ್ದರು. ಆದರೆ, ಈಗಿನ ಗೃಹ ಸಚಿವರು ವಿಧಾನಸೌಧದಲ್ಲೇ ಪಾಕಿಸ್ತಾನ್‌ ಜಿಂದಾಬಾದ್‌ ಘೋಷಣೆ ಕೂಗಿದರೂ ಗಂಭೀರವಾಗಿ ಪರಿಗಣಿಸಿಲ್ಲ. ಘಟನೆ ನಡೆದು 40 ಗಂಟೆ ಕಳೆದರೂ ಒಬ್ಬರನ್ನೂ ಬಂದಿಸಿಲ್ಲ ಅಂತ ಹೇಳಿದ ಮೇಲೆ ಇವರು ಅಧಿಕಾರದಲ್ಲಿ ಇರಲು ಲಾಯಕ್ ಇಲ್ಲʼʼ ಎಂದರು. ಬಳಿಕ ಇತರ ಶಾಸಕರ ಜತೆ ಸದನದ ಬಾವಿಗೆ ಇಳಿದರು.

ಇದನ್ನೂ ಓದಿ : Budget Session : ಹೆಡಗೇವಾರ್‌ ಸ್ವಾತಂತ್ರ್ಯಕ್ಕೆ ಹೋರಾಡಿದ್ರಾ? ಗೋಲ್ವಲ್ಕರ್‌ ಭಾಗವಹಿಸಿದ್ರಾ; ಸಿಎಂ ಪ್ರಶ್ನೆ

ಆಗ ಗೃಹ ಸಚಿವ ಪರಮೇಶ್ವರ್‌ ಅವರು, ಎಫ್ಎಸ್ಎಲ್ ರಿಪೋರ್ಟ್ ಬರಲಿ. ಏಳು ಜನರ ಬಳಿ ಹೇಳಿಕೆ ಪಡೆದಿದ್ದೇವೆ. ಇದನ್ನ ಗಂಭೀರವಾಗಿ ಪರಿಗಣಿಸಿದ್ದೇವೆ ಎಂದರು.

ʻʻಪಾಕಿಸ್ತಾನ ಜಿಂದಾಬಾದ್ ಅಂತ ಕೂಗಿದ್ರೆ ಕ್ರಮ ನಿಶ್ಚಿತ. ನಾವು ದೇಶಭಕ್ತಿಯನ್ನು ಇವರಿಂದ ಕಲಿಯುವ ಅಗತ್ಯವಿಲ್ಲ. ಎಫ್ಎಸ್ಎಲ್ ರಿಪೋರ್ಟ್ ಬರಲಿ. ನಾವು ಯಾರನ್ನೂ ಸಹ ರಕ್ಷಣೆ ಮಾಡಲ್ಲ.ʼʼ ಎಂದರು. ಸದನದ ಬಾವಿಯಲ್ಲಿ ಇಳಿದು ಗದ್ದಲ ಮಾಡುವುದು ಸರಿಯಲ್ಲ ಎಂದು ಹೇಳಿದರು.

Budget Session Siddaramaiah RSS Leaders

ಬಿಜೆಪಿ ಸದಸ್ಯರು ಧರಣಿ ನಡೆಸುತ್ತಿರುವ ನಡುವೆಯೇ ಬಜೆಟ್ ಮೇಲೆ ಚರ್ಚೆಗೆ ಸಿಎಂ ಉತ್ತರ ನೀಡಲು ಆರಂಭಿಸಿದರು. ಆಗ ಸದನದಲ್ಲಿ ಭಾರಿ ಗದ್ದಲ ಉಂಟಾಯಿತು. ಬಿಜೆಪಿ ಶಾಸಕರು ಪೇಪರ್‌ಗಳನ್ನು ಹರಿದು ಹಾಕಿದರು. ಸಿದ್ದರಾಮಯ್ಯ ಅವರ ಮಾತುಗಳನ್ನು ಸುಳ್ಳು ಸುಳ್ಳು.. ಬುರುಡೆ ಬುರುಡೆ ಎಂದು ರೇಗಿಸಿದ ಬಿಜೆಪಿ ಶಾಸಕರು, ನ್ಯಾಯ ಬೇಕು ಅಂತ ಬಾವಿಯಲ್ಲಿ ಸುತ್ತು ಹೊಡೆದರು.

ಕಟ್ಟಿ ಕಟ್ಟಿ ಕಾಂಗ್ರೆಸ್ ಗೆ ಚಟ್ಟ ಕಟ್ಟಿ.. ಸತ್ತೋಯಿತು, ಸತ್ತೋಯಿತು.. ಕಾಂಗ್ರೆಸ್ ಸತ್ತೋಯಿತು ಎಂದು ಬಿಜೆಪಿ ಭಜನೆ ಶುರು ಮಾಡಿತು. ʻʻಮೊದಲು ಸಿಎಂ ರಾಜೀನಾಮೆ ಕೊಡಬೇಕು. ವಿಧಾನ ಸೌಧಕ್ಕೆ ಭಯೋತ್ಪಾದಕರನ್ನು ಕರೆ ತಂದಿದ್ದು ಇವರು. ಇವರ ನಡೆ ವಿರೋಧಿಸಿ ನಾವು ರಾಜಭವನ ಚಲೋ ಮಾಡ್ತೀವಿ. ರಾಜಭವನ ತೆರಳಿ ಸರ್ಕಾರದ ವಿರುದ್ಧ ದೂರು ಕೊಡ್ತೀವಿ. ಸದನದಿಂದ ವಾಕ್ ಔಟ್ ಮಾಡ್ತೀವಿʼʼ ಎಂದು ವಿಪಕ್ಷ ನಾಯಕ ಆರ್‌. ಅಶೋಕ್‌ ಹೇಳಿದರು. ಬಳಿಕ ಬಿಜೆಪಿ ಸದಸ್ಯರು ಸದನದಿಂದ ಹೊರನಡೆದರು.

Continue Reading

ರಾಜಕೀಯ

Budget Session : ಹೆಡಗೇವಾರ್‌ ಸ್ವಾತಂತ್ರ್ಯಕ್ಕೆ ಹೋರಾಡಿದ್ರಾ? ಗೋಲ್ವಲ್ಕರ್‌ ಭಾಗವಹಿಸಿದ್ರಾ; ಸಿಎಂ ಪ್ರಶ್ನೆ

Budget Session : ದೇಶದ ಸ್ವಾತಂತ್ರ್ಯ ಹೋರಾಟದಲ್ಲಿ ಆರೆಸ್ಸೆಸ್‌ ನಾಯಕರು ಎಂದಾದರೂ ಭಾಗವಹಿಸಿದ್ದರಾ? ಎಂದು ಕೇಳುವ ಮೂಲಕ ಸಿಎಂ ಸಿದ್ದರಾಮಯ್ಯ ಬಿಜೆಪಿಯನ್ನು ತರಾಟೆಗೆ ತೆಗೆದುಕೊಂಡಿದ್ದಾರೆ. ಅವರು ವಿಧಾನಸಭೆಯಲ್ಲಿ ಮಾತನಾಡಿದರು.

VISTARANEWS.COM


on

Budget Session Siddaramaiah RSS Leaders
Koo

ಬೆಂಗಳೂರು: ಬಿಜೆಪಿಯವರು ರಾಜ್ಯದಲ್ಲಿ (BJP Karnataka) ಇದುವರೆಗೆ ಒಂದೇ ಒಂದು ಬಾರಿಯೂ ಜನರ ಆಶೀರ್ವಾದ ಪಡೆದು ಅಧಿಕಾರಕ್ಕೆ ಬಂದಿಲ್ಲ. ಮೂರು ಬಾರಿ ಅಧಿಕಾರಕ್ಕೆ ಏರಿದರೂ ಹಿಂಬಾಗಿಲಿನಿಂದ ಬಂದವರು. ಜನ ಇವರಿಗೆ ಯಾವತ್ತೂ ಅವಕಾಶ ಕೊಟ್ಟಿಲ್ಲ ಎಂದು ಸಿಎಂ ಸಿದ್ದರಾಮಯ್ಯ (CM Siddaramiah) ಅವರು ಹೇಳಿದರು. ಗುರುವಾರ ರಾಜ್ಯ ವಿಧಾನಸಭೆಯಲ್ಲಿ ಆಯವ್ಯಯ ಭಾಷಣ (Budget Session) ಕುರಿತ ಚರ್ಚೆಗೆ ಉತ್ತರ ನೀಡಿದರು.

ಬಿಜೆಪಿಯವರು ನಮಗೆ ದೇಶಭಕ್ತಿ ಪಾಠ ಹೇಳಿ ಕೊಡಲು ಬರುತ್ತಾರೆ. ಈ ದೇಶಕ್ಕೆ ಸ್ವಾತಂತ್ರ್ಯ ತಂದುಕೊಟ್ಟದ್ದು ಕಾಂಗ್ರೆಸ್.‌ ಆರ್.ಎಸ್.‌ಎಸ್‌ 1925ರಲ್ಲೇ ಅಸ್ತಿತ್ವಕ್ಕೆ ಬಂತಲ್ಲ, ಅದು ಸ್ವಾತಂತ್ರ್ಯ ಹೋರಾಟದಲ್ಲಿ ಭಾಗವಹಿಸಲೇ ಇಲ್ಲ. ಆರೆಸ್ಸೆಸ್‌ ಸ್ಥಾಪಕರಾದ ಕೇಶವ ಬಲಿರಾಮ್‌ ಹೆಡಗೇವಾರ್‌ (Keshav Baliram Hedagevar) ಅವರು ಸ್ವಾತಂತ್ರ್ಯ ಹೋರಾಟದಲ್ಲಿ ಭಾಗವಹಿಸಿದ್ರಾ? ಮತ್ತೊಬ್ಬ ಸರಸಂಘಚಾಲಕ ಗೋಳ್ವಳ್ಕರ್‌ ಅವರು ಸ್ವಾತಂತ್ರ್ಯ ಹೋರಾಟದಲ್ಲಿ ಧುಮುಕಿದ್ರಾ? ಯಾವತ್ತೂ ಇಲ್ಲ ಎಂದು ಹೇಳಿದರು ಸಿದ್ದರಾಮಯ್ಯ.

ಅನಂತಕುಮಾರ್‌ ಹೆಗಡೆ ಅವರು ಕೇಂದ್ರ ಸಚಿವರಾಗಿದ್ದಾಗ, ನಾವು ಅಧಿಕಾರಕ್ಕೆ ಬಂದಿರುವುದೇ ಸಂವಿಧಾನ ಬದಲಿಸಲು ಎಂದು ಹೇಳಿಕೆ ನೀಡಿದರು. ಇದರ ಬಗ್ಗೆ ಮೋದಿ ಅವರಾಗಲಿ, ಪಕ್ಷದ ಹಿರಿಯರಾಗಲಿ ಯಾವುದೇ ಕ್ರಮ ಕೈಗೊಳ್ಳಲಿಲ್ಲ ಎಂದು ಸಿದ್ದರಾಮಯ್ಯ ಹೇಳಿದರು.

Budget Session Siddaramaiah RSS Leaders1

ಅಭಿವೃದ್ಧಿ ಇಲ್ಲದೆ ಜಿಡಿಪಿ, ಆಯವ್ಯಯ ಗಾತ್ರ ಹೆಚ್ಚಳವಾಗಲು ಸಾಧ್ಯವೇ?

ಹಿಂದಿನ ಬಿಜೆಪಿ ಸರ್ಕಾರದವರು ಏನೂ ಅಭಿವೃದ್ಧಿ ಮಾಡಿರಲಿಲ್ಲ. ಬರೀ ಲೂಟಿ ಹೊಡೆದರು. ನಾವು ಗ್ಯಾರಂಟಿ ಯೋಜನೆಗಳ ಜೊತೆಗೆ ಅಭಿವೃದ್ಧಿಯನ್ನೂ ಮಾಡಿದ್ದೇವೆ. ಇದು ಕಾಂಗ್ರೆಸ್‌ ಮತ್ತು ಬಿಜೆಪಿ ಸರ್ಕಾರಕ್ಕೆ ಇರುವ ವ್ಯತ್ಯಾಸ ಎಂದು ಮುಖ್ಯಮಂತ್ರಿ ಸಿದ್ದರಾಮಯ್ಯ ಅವರು ತಿಳಿಸಿದರು.

ಬಸವರಾಜ ಬೊಮ್ಮಾಯಿ ಅವರು 2023ರ ಫೆಬ್ರುವರಿಯಲ್ಲಿ 3.09 ಲಕ್ಷ ಕೋಟಿ ರೂ. ಗಾತ್ರದ ಆಯವ್ಯಯ ಮಂಡಿಸಿದರು. 2024-25ನೇ ಸಾಲಿಗೆ ನಾನು ಮಂಡಿಸಿದ ಆಯವ್ಯಯದ ಗಾತ್ರ 3,71,343 ಕೋಟಿ ರೂ. ನಷ್ಟಿದ್ದು, ಬೊಮ್ಮಾಯಿ ಅವರು ಮಂಡಿಸಿದ ಬಜೆಟ್‌ಗಿಂತ 62,200 ಕೋಟಿ ರೂ. ನಷ್ಟು ಗಾತ್ರ ಹೆಚ್ಚಳವಾಗಿದೆ. ನಾನು ಜುಲೈ 2023 ರಲ್ಲಿ ಮಂಡಿಸಿದ ಬಜೆಟ್‌ಗಿಂತ ಇದು 43,601 ಕೋಟಿ ರೂ. ಹೆಚ್ಚಳವಾಗಿದೆ. ಅಂತೆಯೇ ರಾಜ್ಯದ ಜಿಡಿಪಿ 25,63,247 ಕೋಟಿ ರೂ. ಇತ್ತು. 2024- 25 ಕ್ಕೆ 28,09,063 ಕೋಟಿ ರೂ. ಆಗುವ ನಿರೀಕ್ಷೆ ಇದೆ. ಅಂರೆ 2,41,723 ಕೋಟಿ ರೂ. ಹೆಚ್ಚು. ಅಭಿವೃದ್ಧಿ ಇಲ್ಲದೆ ಆಯವ್ಯಯ ಗಾತ್ರ ಹಾಗೂ ಜಿಡಿಪಿ ಹೆಚ್ಚಳವಾಗಲು ಸಾಧ್ಯವೇ? ಎಂದು ಪ್ರಶ್ನಿಸಿದರು.

Budget Session Siddaramaiah RSS Leaders1

ಮುಖ್ಯಮಂತ್ರಿಗಳ ಉತ್ತರದ ಇತರ ಮುಖ್ಯಾಂಶಗಳು

ಕರ್ನಾಟಕದ ಇತಿಹಾಸದಲ್ಲಿ ಮೊದಲ ಬಾರಿ ಬಜೆಟ್‌ ಓದುವಾಗ ವಿರೋಧ ಪಕ್ಷದವರು ಗೈರು ಹಾಜರಾದದ್ದು. ಇವರಿಗೆ ರಾಜ್ಯದ ಆರ್ಥಿಕತೆ ಬಗ್ಗೆ ಕಾಳಜಿ ಇಲ್ಲ. ಕಾಂಗ್ರೆಸ್‌ ನವರು 9 ಜನ , ಬಿಜೆಪಿ 13 ಜನ ಹಾಗೂ ಜೆಡಿಎಸ್‌ 3 ಜನ ಭಾಗವಹಿಸಿದ್ದಾರೆ. ಇಷ್ಟೂ ಸದಸ್ಯರು ಬಜೆಟ್‌ ಬಗ್ಗೆ ಅನೇಕ ಸಲಹೆ ಸೂಚನೆ ನೀಡಿದ್ದಾರೆ. ಬಜೆಟ್‌ನ್ನು ಟೀಕಿಸಿದ್ದಾರೆ. ಕೇಂದ್ರ ಸರ್ಕಾರವನ್ನು ಸಮರ್ಥಿಸಿಕೊಂಡಿದ್ದಾರೆ. ಇದೆಲ್ಲವನ್ನೂ ಸ್ವಾಗತ ಮಾಡುತ್ತೇನೆ. ಅವರ ಸಲಹೆ- ಸೂಚನೆಗಳನ್ನು ಸರ್ಕಾರ ಮುಂದಿನ ವರ್ಷದಲ್ಲಿ ಆರ್ಥಿಕ ವರ್ಷದಲ್ಲಿ ಏನೇನು ಮಾಡಬೇಕು ಅದೆಲ್ಲವನ್ನೂ ಮಾಡುತ್ತೇವೆಂದು ಹೇಳಬಯಸುತ್ತೇನೆ.

ಇದನ್ನೂ ಓದಿ : Budget Session: ನೀವು ತನಿಖೆ ಮಾಡುವಷ್ಟರಲ್ಲಿ ಬಾಂಬ್‌ ಇಟ್ಟು ಓಡಿ ಹೋಗುತ್ತಾರೆ; ಅಧಿವೇಶನದಲ್ಲಿ ಸರ್ಕಾರದ ವಿರುದ್ಧ ಬಿಜೆಪಿ ಕೆಂಡ

ಇದು ಹೇಗೆ ಅಭಿವೃದ್ಧಿ ಶೂನ್ಯ ಹೇಗೆ?

ವಿರೋಧ ಪಕ್ಷದವರು ಅಭಿವೃದ್ಧಿ ಶೂನ್ಯ ಎಂದಿದ್ದಾರೆ. ಒಟ್ಟು ಅಭಿವೃದ್ಧಿ ಕಾರ್ಯಕ್ರಮಗಳಿಗೆ 1,20,000 ಕೋಟಿ ರೂ. ವೆಚ್ಚದ ಹಂಚಿಕೆ ಮಾಡಿದ್ದೇವೆ. 52,009 ಕೋಟಿ ರೂ. ಗಳನ್ನು ಗ್ಯಾರಂಟಿ ಯೋಜನೆಗಳಿಗೆ ಮೀಸಲಿರಿಸಿದ್ದು, ಉಳಿದ ಮೊತ್ತ ಅಭಿವೃದ್ಧಿ ಕಾರ್ಯಗಳಿಗೆ ಹಂಚಿಕೆ ಮಾಡಲಾಗಿದೆ.

ಜಿಡಿಪಿ- 2023- 24 ರಲ್ಲಿ 25,63,247 ಕೋಟಿ ರೂ. ಇತ್ತು. 2024- 25 ಕ್ಕೆ 28,09,063 ಕೋಟಿ ರೂ. ಆಗುವ ನಿರೀಕ್ಷೆ ಇದೆ. ಅಂದರೆ 2,41,723 ಕೋಟಿ ರೂ. ಹೆಚ್ಚು. ಆದ್ದರಿಂದ ಜಿಡಿಪಿಯೂ ಹೆಚ್ಚಾಗಿದೆ, ಬಜೆಟ್‌ ಗಾತ್ರವೂ ಹೆಚ್ಚಾಗಿದೆ. ಇದರಿಂದ ರಾಜ್ಯದಲ್ಲಿ ಏನೂ ಅಭಿವೃದ್ಧಿ ಮಾಡಿಲ್ಲ ಎಂದು ವಿರೋಧ ಪಕ್ಷದವರು ಮಾಡಿರುವ ಆಪಾದನೆಯಲ್ಲಿ ಯಾವುದೇ ತಿರುಳಿಲ್ಲ ಎಂಬುದು ಸಾಬೀತಾಗುತ್ತದೆ.

ಗ್ಯಾರಂಟಿ ಯೋಜನೆಗಳಿಗೆ ಈ ವರ್ಷ 36,000 ಕೋಟಿ ರೂ. ವೆಚ್ಚ ಮಾಡಿದ್ದೇವೆ. ಶಕ್ತಿ ಯೋಜನೆ, ಗೃಹಜ್ಯೋತಿ, ಅನ್ನಭಾಗ್ಯ, ಗೃಹಲಕ್ಷ್ಮಿ, ಯುವನಿಧಿ – ಈ ಕಾರ್ಯಕ್ರಮಗಳಿಗೆ 36,000 ಕೋಟಿ ರೂ. ಬಳಸಲಾಗಿದೆ. ಮುಂದಿನ ಬಜೆಟ್‌ ನಲ್ಲಿ 52,009 ಕೋಟಿ ಒದಗಿಸಿದ್ದು, ಇದರೊಂದಿಗೆ ಶಿಕ್ಷಣ, ಆರೋಗ್ಯ, ರಸ್ತೆಗಳು, ಶಾಂತಿ ಸುವ್ಯವಸ್ಥೆ ಎಲ್ಲದಕ್ಕೂ ಆದ್ಯತೆ ನೀಡಲಾಗಿದೆ.

ಹಿಂದಿನ ಬಿಜೆಪಿ ಸರ್ಕಾರದವರು ಏನೂ ಅಭಿವೃದ್ಧಿ ಮಾಡಿರಲಿಲ್ಲ. ಬರೀ ಲೂಟಿ ಹೊಡೆದರು. ನಾವು ಗ್ಯಾರಂಟಿ ಯೋಜನೆಗಳ ಜೊತೆಗೆ ಅಭಿವೃದ್ಧಿ ಯನ್ನೂ ಮಾಡಿದ್ದೇವೆ. ಇದು ಕಾಂಗ್ರೆಸ್‌ ಮತ್ತು ಬಿಜೆಪಿ ಸರ್ಕಾರಕ್ಕೆ ಇರುವ ವ್ಯತ್ಯಾಸ ಎಂದರು ಸಿದ್ದರಾಮಯ್ಯ.

Continue Reading
Advertisement
IPL 2024
ಪ್ರಮುಖ ಸುದ್ದಿ4 hours ago

IPL 2024 : ಮುಂಬೈ ವಿರುದ್ಧ 18 ರನ್ ಜಯ, ಪ್ಲೇಆಫ್​ ಪ್ರವೇಶಿಸಿದ ಕೆಕೆಆರ್​ ತಂಡ

car catches fire
ಕ್ರೈಂ5 hours ago

Car Catches Fire: ಕಾರಿಗೆ ಏಕಾಏಕಿ ಬೆಂಕಿ ಹೊತ್ತಿಕೊಂಡು ವ್ಯಕ್ತಿ ಸಜೀವ ದಹನ

jay Shah
ಪ್ರಮುಖ ಸುದ್ದಿ6 hours ago

Jay Shah : ದೇಶಿಯ ಕ್ರಿಕೆಟ್​ನಲ್ಲಿ ಭಾರೀ ಬದಲಾವಣೆಗಳ ಸೂಚನೆ ನೀಡಿದ ಜಯ್​ ಶಾ

ಬೆಂಗಳೂರು6 hours ago

Child Actor Master OM: ಓದಿಗೂ ಸೈ, ಮಾಡೆಲಿಂಗ್‌ಗೂ ಸೈ ಈ ಸೂಪರ್‌ ಟೀನ್‌ ಮಾಡೆಲ್‌ ಮಾಸ್ಟರ್‌ ಓಂ!

ಬೆಂಗಳೂರು6 hours ago

LuLu Fashion Week 2024: ಲುಲು ಫ್ಯಾಷನ್ ವೀಕ್ 2024; ಕಲರ್ ಫುಲ್ ಬಟ್ಟೆ ತೊಟ್ಟು ಕಂಗೊಳಿಸಿದ ನಾರಿಮಣಿಗಳು

IPL 2024
ಕ್ರಿಕೆಟ್6 hours ago

IPL 2024 : ಗುಜರಾತ್​ ತಂಡ ಸೇರಿದ ಗುರ್ನೂರ್ ಬ್ರಾರ್; ಎಲ್ಲಿಯ ಆಟಗಾರ ಇವರು?

Devarajegowda
ಕರ್ನಾಟಕ8 hours ago

ಮಹಿಳೆಗೆ ಲೈಂಗಿಕ ದೌರ್ಜನ್ಯ ಕೇಸ್;‌ ವಕೀಲ ದೇವರಾಜೇಗೌಡಗೆ 14 ದಿನ ನ್ಯಾಯಾಂಗ ಬಂಧನ

Murder Case
ಕರ್ನಾಟಕ8 hours ago

Murder Case: ಚಾಕುವಿನಿಂದ ಇರಿದು ಯುವಕನ ಭೀಕರ ಹತ್ಯೆ; ಬಾಲಕಿಯ ಅಪಹರಿಸಿ ಕತ್ತು ಕೊಯ್ದ ಕಿರಾತಕರು

Richard Hansen
ಕರ್ನಾಟಕ8 hours ago

Selco India: ಸೌರವಿದ್ಯುತ್ ಪ್ರವರ್ತಕ ರಿಚರ್ಡ್‌ ಹ್ಯಾನ್ಸೆನ್‌ಗೆ ಸೆಲ್ಕೋದ ಪ್ರತಿಷ್ಠಿತ ʼಸೂರ್ಯಮಿತ್ರʼ ಪ್ರಶಸ್ತಿ

Legislative Council Election
ಕರ್ನಾಟಕ8 hours ago

ವಿಧಾನ ಪರಿಷತ್ ಚುನಾವಣೆ; 5 ಕ್ಷೇತ್ರ ಬಿಜೆಪಿಗೆ, 1 ಕ್ಷೇತ್ರ ಜೆಡಿಎಸ್‌ಗೆ; ಕಮಲ ಪಾಳಯದ ಪಟ್ಟಿ ಇಲ್ಲಿದೆ

Sharmitha Gowda in bikini
ಕಿರುತೆರೆ7 months ago

Geetha Serial Kannada: ನಿದ್ದೆ ಕದ್ದ ಚೋರಿ! ನಟಿ `ಭಾನುಮತಿ’ ಹಾಟ್‌ ಪೋಟೊಗಳಿಗೆ ಫ್ಯಾನ್ಸ್ ಫುಲ್ ಫಿದಾ

Kannada Serials
ಕಿರುತೆರೆ7 months ago

Kannada Serials TRP: 2ನೇ ಸ್ಥಾನದಲ್ಲಿ 2 ಧಾರಾವಾಹಿಗಳು; ಟಿಆರ್‌ಪಿ ರೇಸ್‌ನಲ್ಲಿಲ್ಲ ಭಾಗ್ಯಲಕ್ಷ್ಮೀ!

Bigg Boss- Saregamapa 20 average TRP
ಕಿರುತೆರೆ7 months ago

Kannada Serials TRP: ಏಳನೇ ಸ್ಥಾನಕ್ಕೆ ʻಅಮೃತಧಾರೆʼ ಕುಸಿತ; ಬಿಗ್‌ ಬಾಸ್‌-ಸರಿಗಮಪ ಟಿಆರ್‌ಪಿ ಎಷ್ಟು?

galipata neetu
ಕಿರುತೆರೆ5 months ago

Kanyadana Serial: ಕಿರುತೆರೆಗೆ ಮತ್ತೆ ಎಂಟ್ರಿ ಕೊಟ್ಟ ʻಗಾಳಿಪಟʼ ಖ್ಯಾತಿಯ ʻನೀತುʼ!

Kannada Serials
ಕಿರುತೆರೆ8 months ago

Kannada Serials TRP: ನಾಲ್ಕನೇ ಸ್ಥಾನಕ್ಕೆ ಕುಸಿತ ಕಂಡ ʻಸೀತಾ ರಾಮʼ; ಟಿಆರ್‌ಪಿ ರೇಸ್‌ಗೆ ʻಭಾಗ್ಯಲಕ್ಷ್ಮಿʼ ಬ್ಯಾಕ್‌!

Kannada Serials
ಕಿರುತೆರೆ7 months ago

Kannada Serials TRP: ಟಿಆರ್‌ಪಿಯಲ್ಲಿ ʻಭಾಗ್ಯಲಕ್ಷ್ಮೀʼ ಹವಾ; ʻಪುಟ್ಟಕ್ಕನ ಮಕ್ಕಳುʼ ಧಾರಾವಾಹಿಗೆ ಸಂಕಷ್ಟ!

Bigg Boss' dominates TRP; Sita Rama fell to the sixth position
ಕಿರುತೆರೆ7 months ago

Kannada Serials TRP: ಟಿಆರ್‌ಪಿಯಲ್ಲಿ ʻಬಿಗ್ ಬಾಸ್ʼದೇ ಮೇಲುಗೈ; 6ನೇ ಸ್ಥಾನಕ್ಕೆ ಕುಸಿದ ʻಸೀತಾ ರಾಮʼ

geetha serial Dhanush gowda engagement
ಕಿರುತೆರೆ5 months ago

Dhanush Gowda: ಗೀತಾ ಧಾರಾವಾಹಿ ನಟನ ನಿಶ್ಚಿತಾರ್ಥ; ಭವ್ಯಾಳ ಕಮೆಂಟ್‌ ಬಾಕ್ಸ್‌ ಆಫ್‌!

varun
ಕಿರುತೆರೆ6 months ago

Brindavana Serial: ʼಬೃಂದಾವನʼ ಧಾರಾವಾಹಿಯಲ್ಲಿ ದೊಡ್ಡ ಟ್ವಿಸ್ಟ್‌; ಪ್ರಮುಖ ಪಾತ್ರಧಾರಿಯೇ ಬದಲು

Kannada Serials
ಕಿರುತೆರೆ8 months ago

Kannada Serials TRP: ಟಿಆರ್‌ಪಿಯಲ್ಲಿ ಏರಿಕೆ ಕಂಡ ʻಅಮೃತಧಾರೆʼ; ʻಗಟ್ಟಿಮೇಳʼಕ್ಕೆ ನಾಲ್ಕನೇ ಸ್ಥಾನ!

Bengaluru News
ಬೆಂಗಳೂರು13 hours ago

Bengaluru News : ಕೆಎಎಸ್‌ ಅಧಿಕಾರಿ ಪತ್ನಿ ಅನುಮಾನಾಸ್ಪದ‌ ಸಾವು; ಹೈಕೋರ್ಟ್‌ ವಕೀಲೆಗೆ ಕಾಡಿದ್ದೇನು?

Dina Bhavishya
ಭವಿಷ್ಯ24 hours ago

Dina Bhavishya : ಈ ದಿನ ಅತಿರೇಕದ ಮಾತುಗಳು ಅಪಾಯ ತರಬಹುದು

Physical Abuse The public prosecutor called the client woman to the lodge
ಕ್ರೈಂ2 days ago

Physical Abuse : ಲೈಂಗಿಕ ದೌರ್ಜನ್ಯ; ಕಕ್ಷಿದಾರ ಮಹಿಳೆಯನ್ನು ಮಂಚಕ್ಕೆ ಕರೆದ ಪಬ್ಲಿಕ್ ಪ್ರಾಸಿಕ್ಯೂಟರ್!

murder case kalaburagi
ಕಲಬುರಗಿ2 days ago

Murder Case : ಕಾಂಗ್ರೆಸ್‌ಗೆ ವೋಟ್‌ ಹಾಕಿದ್ದಕ್ಕೆ ಅಮಾವಾಸ್ಯೆ ದಿನ ಕರೆದು ಕೊಂದರು

Rain Effect In karnataka
ಮಳೆ2 days ago

Rain Effect : ಬಿರುಗಾಳಿ ರಭಸಕ್ಕೆ ಮನೆಯ ಗೇಟ್ ಬಿದ್ದು ಬಾಲಕಿ ಸಾವು; ಸಿಡಿಲಿಗೆ ಎತ್ತುಗಳು ಬಲಿ

Dina Bhavishya
ಭವಿಷ್ಯ2 days ago

Dina Bhavishya: ಶುಭ ಶುಕ್ರವಾರ ಈ ರಾಶಿಯವರಿಗೆ ಖುಲಾಯಿಸಲಿದೆ ಲಕ್‌

Prajwal Revanna case Revanna bail plea to be heard on Monday Advocate Nagesh argument was as follows
ಕ್ರೈಂ2 days ago

Prajwal Revanna Case: ರೇವಣ್ಣ ಜಾಮೀನು ಅರ್ಜಿ ಸೋಮವಾರಕ್ಕೆ: ಎಸ್‌ಐಟಿಗೆ ಹಿಗ್ಗಾಮುಗ್ಗಾ ತರಾಟೆ; ವಕೀಲ ನಾಗೇಶ್‌ ವಾದ ಹೀಗಿತ್ತು!

Prajwal Revanna Case Hasanambe is going to destroy this government HD Kumaraswamy curse
ರಾಜಕೀಯ2 days ago

Prajwal Revanna Case: ಈ ಸರ್ಕಾರವನ್ನು ಹಾಸನಾಂಬೆ ಧ್ವಂಸ ಮಾಡಲಿದ್ದಾಳೆ: ಎಚ್‌ಡಿಕೆ ಶಾಪ

Prajwal Revanna Case DK Shivakumar alleged mastermind in 25000 pen drive allotment
ಹಾಸನ2 days ago

Prajwal Revanna Case: 25,000 ಪೆನ್ ಡ್ರೈವ್ ಹಂಚಿಕೆಯಲ್ಲಿ ಡಿ.ಕೆ. ಶಿವಕುಮಾರ್ ಮಾಸ್ಟರ್ ಮೈಂಡ್ ಎಂದು ರಾಜ್ಯಪಾಲರಿಗೆ ದೂರು!

SSLC Result 2024 what is the reason for most of the students fail in SSLC
ಕರ್ನಾಟಕ3 days ago

SSLC Result 2024: ಎಸ್‌ಎಸ್‌ಎಲ್‌ಸಿಯಲ್ಲಿ ಹೆಚ್ಚಿನ ಮಕ್ಕಳು ಫೇಲ್‌ ಆಗಲು ಶಿಕ್ಷಣ ಇಲಾಖೆಯ ಈ ನಿರ್ಧಾರವೇ ಕಾರಣ!

ಟ್ರೆಂಡಿಂಗ್‌