ವಿಸ್ತಾರ ಸಂಪಾದಕೀಯ: ವಿದ್ಯುತ್‌ ದರ ಇಳಿಕೆ ಶ್ಲಾಘನೀಯ ಕ್ರಮ - Vistara News

ಸಂಪಾದಕೀಯ

ವಿಸ್ತಾರ ಸಂಪಾದಕೀಯ: ವಿದ್ಯುತ್‌ ದರ ಇಳಿಕೆ ಶ್ಲಾಘನೀಯ ಕ್ರಮ

ಎಸ್ಕಾಂಗಳ ಬೇಡಿಕೆಯಂತೆ ವಿದ್ಯುತ್‌ ದರ ಏರಿಕೆಯಾಗಲಿದೆ, ಎಲ್ಲರಿಗೂ ಶಾಕ್‌ ಹೊಡೆಯಲಿದೆ ಎಂದೇ ಮಾತನಾಡಿಕೊಳ್ಳಲಾಗುತ್ತಿತ್ತು. ಆದರೆ, ಆಯೋಗ ಮಾತ್ರ ವಾಣಿಜ್ಯ, ಗೃಹಬಳಕೆ ವಿದ್ಯುತ್‌ ಬಳಕೆದಾರರಿಗೆ ಭಾರಿ ಅಚ್ಚರಿ ನೀಡಿದೆ.

VISTARANEWS.COM


on

Electricity Bil
ಮಹತ್ವದ, ಕುತೂಹಲಕರ ಸುದ್ದಿಗಾಗಿ ಫಾಲೊ ಮಾಡಿ
Koo

ಸಿಎಂ ಸಿದ್ದರಾಮಯ್ಯ ಸರ್ಕಾರ ರಾಜ್ಯದ ಜನತೆಗೆ ಸಿಹಿ ಸುದ್ದಿ ನೀಡಿದೆ. ರಾಜ್ಯ ವಿದ್ಯುತ್‌ ನಿಯಂತ್ರಣ ಆಯೋಗ (Karnataka Electricity regulatory Commission) ವಿದ್ಯುತ್‌ ದರವನ್ನು ಗಣನೀಯ ಪ್ರಮಾಣದಲ್ಲಿ ಇಳಿಸಿದೆ. ಬುಧವಾರ ಸಂಜೆ ವೇಳೆ ವಿದ್ಯುತ್‌ ದರ ಪರಿಷ್ಕರಣೆ ಘೋಷಣೆಯಾಗಿದೆ. ಎಸ್ಕಾಂಗಳ ಬೇಡಿಕೆಯಂತೆ ವಿದ್ಯುತ್‌ ದರ ಏರಿಕೆಯಾಗಲಿದೆ, ಎಲ್ಲರಿಗೂ ಶಾಕ್‌ ಹೊಡೆಯಲಿದೆ ಎಂದೇ ಮಾತನಾಡಿಕೊಳ್ಳಲಾಗುತ್ತಿತ್ತು. ಆದರೆ, ಆಯೋಗ ಮಾತ್ರ ವಾಣಿಜ್ಯ, ಗೃಹಬಳಕೆ ವಿದ್ಯುತ್‌ ಬಳಕೆದಾರರಿಗೆ ಭಾರಿ ಸರ್‌ಪ್ರೈಸ್‌ ನೀಡಿದೆ. ಗ್ಯಾರಂಟಿ ಯೋಜನೆಗಳಿಂದಾಗಿ ರಾಜ್ಯ ಸರ್ಕಾರ ದಿವಾಳಿ ಎದ್ದಿದೆ ಎಂಬ ಆರೋಪ, ಗುಲ್ಲುಗಳ ನಡುವೆಯೇ ಇದೊಂದು ಸಿಹಿಯಾದ ಶಾಕ್.‌ ಪರಿಷ್ಕೃತ ದರ ಮಾರ್ಚ್ 1ರಿಂದ ಅನ್ವಯವಾಗಲಿದೆ. ಕಳೆದ ಹಣಕಾಸು ವರ್ಷದಲ್ಲಿ ಎಸ್ಕಾಂಗಳಿಗೆ 259 ಕೋಟಿ ರೂ.‌ ಲಾಭವಾಗಿದೆ. ಇದರ ಲಾಭವನ್ನು ಬಳಕೆದಾರರಿಗೆ ನೀಡುವ ಉದ್ದೇಶದಿಂದ ದರವನ್ನು ಇಳಿಸಲಾಗಿದೆ ಎಂದು ಕೆಇಆರ್‌ಸಿ ಹೇಳಿದೆ. ಅಪರೂಪದಲ್ಲಿ ಅಪರೂಪವಾಗಿ ನಡೆಯುವ ಈ ಇಳಿಕೆಯ ಲಾಭವನ್ನು ಗೃಹ ಬಳಕೆದಾರರು ಮಾತ್ರವಲ್ಲ, ವಾಣಿಜ್ಯ, ಕೈಗಾರಿಕೆ, ರೈತರು ಎಲ್ಲರಿಗೂ ನೀಡಲಾಗಿದೆ. ಇದೊಂದು ಶ್ಲಾಘನೀಯ ಕ್ರಮ.

ಮುಖ್ಯವಾಗಿ ಗೃಹಬಳಕೆ ವಿದ್ಯುತ್ ಬಳಕೆದಾರರಿಗೆ 100 ಯೂನಿಟ್‌ಗಳಿಗಿಂತ ಹೆಚ್ಚಿನ ಯೂನಿಟ್‌ಗೆ 1 ರೂಪಾಯಿ 10 ಪೈಸೆ ಇಳಿಕೆ. ಇದರ ಲಾಭ 100 ಯುನಿಟ್‌ಗಿಂತ ಹೆಚ್ಚು ವಿದ್ಯುತ್‌ ಬಳಸುವವರಿಗೆ ಸಿಗಲಿದೆ. ವಾಣಿಜ್ಯ ಬಳಕೆದಾರರಿಗೆ ಒಂದು ಯುನಿಟ್‌ ವಿದ್ಯುತ್‌ಗೆ 1 ರೂಪಾಯಿ 25 ಪೈಸೆ ಇಳಿಕೆ. ಕೈಗಾರಿಕೆಗಳಿಗೆ ಬಳಸುವ ವಿದ್ಯುತ್‌ ದರದಲ್ಲಿ ಯುನಿಟ್‌ಗೆ 50 ಪೈಸೆ ಇಳಿಕೆ ಮಾಡಲಾಗಿದೆ. ಆಸ್ಪತ್ರೆ ಹಾಗು ಶೈಕ್ಷಣಿಕ ಸಂಸ್ಥೆಗಳಲ್ಲಿ ಬಳಸುವ ವಿದ್ಯುತ್‌ ದರ ಒಂದು ಯುನಿಟ್‌ಗೆ 40 ಪೈಸೆ ಇಳಿಕೆ. ಖಾಸಗಿ ಆಸ್ಪತ್ರೆಗಳು ಹಾಗು ಖಾಸಗಿ ಶಾಲೆಗಳಿಗೆ 50 ಪೈಸೆ ಇಳಿಕೆ. ಖಾಸಗಿ ಏತ ನೀರಾವರಿ ವಿದ್ಯುತ್‌ ಬಳಕೆದಾರರಿಗೆ ಗರಿಷ್ಠ ಲಾಭ ನೀಡಲಾಗಿದ್ದು, ಒಂದು ಯುನಿಟ್‌ಗೆ 2 ರೂಪಾಯಿ ಇಳಿಕೆ ಮಾಡಲಾಗಿದೆ. ಅಪಾರ್ಟ್‌ಮೆಂಟ್‌ಗಳಿಗೆ ಡಿಮ್ಯಾಂಡ್‌ ಚಾರ್ಜಸ್‌ನಲ್ಲಿ 10 ರೂ. ಇಳಿಕೆ ಪ್ರಕಟಿಸಲಾಗಿದೆ. ಇನ್ನು ಗೃಹ ಜ್ಯೋತಿ (Gruha Jyothi) ಉಚಿತ ವಿದ್ಯುತ್‌ ಬಳಕೆದಾರರಿಗೆ ಇದರ ಹೊರೆ ತಟ್ಟುವುದಿಲ್ಲ. ಯಾಕೆಂದರೆ, ಗೃಹಜ್ಯೋತಿಗೆ ಇರುವ ಷರತ್ತುಗಳಲ್ಲಿ ಯಾವುದೇ ಬದಲಾವಣೆ ಇರುವುದಿಲ್ಲ. 200 ಯೂನಿಟ್‌ ವರೆಗೆ ವಿದ್ಯುತ್‌ ಬಳಸುವವರು ಬಿಲ್‌ ಕಟ್ಟಬೇಕಿಲ್ಲ. 200 ಯುನಿಟ್‌ಗಿಂತ ಹೆಚ್ಚು ವಿದ್ಯುತ್‌ ಬಳಸುವವರಿಗೆ ಬಿಲ್‌ ಬರುತ್ತದೆ.

ಬಸವರಾಜ ಬೊಮ್ಮಾಯಿ ಅವರು ಮುಖ್ಯಮಂತ್ರಿ ಆಗಿದ್ದ ಕಾಲದಲ್ಲಿ ನಿವೃತ್ತ ಐಎಎಸ್‌ ಜಿ. ಗುರುಚರಣ್‌ ಅವರ ಏಕಸದಸ್ಯ ಆಯೋಗವೊಂದನ್ನು ರಚಿಸಲಾಗಿದ್ದು, ಇದು ಎಸ್ಕಾಂಗಳ ಸುಧಾರಣೆಯ ಬಗ್ಗೆ ವರದಿಯೊಂದನ್ನು ನೀಡಿತ್ತು. ಇದರಲ್ಲಿ ಕರ್ನಾಟಕದ ಇಂಧನ ವಲಯದ ಸಾಮರ್ಥ್ಯಗಳನ್ನು ಎತ್ತಿ ತೋರಿಸಿತ್ತು. ಇಂಧನ ಉತ್ಪಾದನೆಯಲ್ಲಿ ರಾಷ್ಟ್ರೀಯ ಮಟ್ಟದಲ್ಲಿ ಕರ್ನಾಟಕ ರಾಜ್ಯವು ನಾಯಕತ್ವ ವಹಿಸಿದೆ. ಕರ್ನಾಟಕವು ನವೀಕರಿಸಬಹುದಾದ, ಹೆಚ್ಚುವರಿ ವಿದ್ಯುತ್ ಹೊಂದಿರುವ ರಾಜ್ಯವಾಗಿದೆ. ಆಧುನಿಕ ಗ್ರಿಡ್ ಸೌಲಭ್ಯಗಳನ್ನು ಅಳವಡಿಸಿಕೊಳ್ಳುವುದರ ಜೊತೆಗೆ ಕೋಟ್ಯಂತರ ಗ್ರಾಹಕರಿಗೆ ವಿವಿಧ ಸೇವೆಗಳನ್ನು ಒದಗಿಸಿದೆ. ಆದರೆ ರಾಜ್ಯದ ಪೂರ್ಣ ಸಾಮರ್ಥ್ಯವನ್ನು ಇನ್ನೂ ಶೋಧಿಸಬೇಕಿದೆ. ಇನ್ನಷ್ಟು ಪರಿಣಾಮಕಾರಿ, ಸುಸ್ಥಿರವಾಗಿ ಬೆಳೆಯಬಲ್ಲ ಸಾಧ್ಯತೆಯನ್ನು ರಾಜ್ಯದ ಇಂಧನ ವಲಯ ಹೊಂದಿದೆ ಎಂದು ಸಮಿತಿ ಅಭಿಪ್ರಾಯಪಟ್ಟಿತ್ತು. ಅದು ನಿಜವಾದುದು ಎಂದು ಈ ಬೆಳವಣಿಗೆ ತೋರಿಸಿದೆ.

ಇದನ್ನೂ ಓದಿ: Biggest Surprise! : ಹೀಗೂ ಉಂಟೆ! ರಾಜ್ಯದಲ್ಲಿ ವಿದ್ಯುತ್‌ ದರ ಭಾರಿ ಇಳಿಕೆ! ನಿಜಕ್ಕೂ ಶಾಕ್!‌

ವಿದ್ಯುತ್‌ ಬೆಲೆ ಮತ್ತು ವಿದ್ಯುತ್ತಿನ ಲಭ್ಯತೆ ರಾಜ್ಯದ ಆರ್ಥಿಕ ಬೆಳವಣಿಗೆಯಲ್ಲಿ ಮುಖ್ಯವಾದುದು. ವಿದ್ಯುತ್‌ ಬೆಲೆ ಏರಿದಂತೆಲ್ಲ ಕೈಗಾರಿಕೆಗಳ, ಕೃಷಿಯ ಉತ್ಪಾದನಾ ವೆಚ್ಚ ಹೆಚ್ಚಾಗುತ್ತದೆ. ಇದರಿಂದ ಕೈಗಾರಿಕೆ ಹಾಗೂ ಕೃಷಿ ಉತ್ಪನ್ನಗಳು ಗ್ರಾಹಕನವರೆಗೆ ಬರುವಾಗ ಅದರ ಬೆಲೆ ವರ್ಧಿಸುತ್ತದೆ. ಪೆಟ್ರೋಲ್‌ ಬೆಲೆ ಹೇಗೋ ಹಾಗೇ ವಿದ್ಯುತ್‌ ಬೆಲೆ ಹೆಚ್ಚಳವೂ ಹೀಗೆ ಹಣದುಬ್ಬರಕ್ಕೆ ಕಾರಣವಾಗುತ್ತದೆ. ಇದನ್ನು ತಪ್ಪಿಸಲು ಸಕಾರಣವಾದ ವಿದ್ಯುತ್‌ ಬೆಲೆಯನ್ನು ಉಳಿಸಿಕೊಳ್ಳುವುದೊಂದೇ ದಾರಿ. ಗೃಹಜ್ಯೋತಿ ಯೋಜನೆಯ ಮೂಲಕ ಮಧ್ಯಮ ವರ್ಗದವರ ಒಂದು ಹೊರೆಯನ್ನು ಸರ್ಕಾರ ಇಳಿಸಿದೆ. ವಿದ್ಯುತ್‌ ದರ ಇಳಿಕೆಯ ಮೂಲಕ ಅದನ್ನು ಇನ್ನಷ್ಟು ಹಗುರವಾಗಿಸಿದೆ. ಈ ಶ್ಲಾಘನೀಯ ಕ್ರಮದಿಂದ ಉಂಟಾಗುವ ಉಳಿಕೆಯನ್ನು ಮಧ್ಯಮ, ಕೆಳಮಧ್ಯಮ ವರ್ಗದವರು ಇತರ ವೆಚ್ಚಗಳನ್ನು ಸರಿದೂಗಿಸಲು ಬಳಸಬಹುದಾಗಿದೆ.

ಈ ಸಂಗತಿಯ ಕುರಿತು ನಿಮ್ಮ ಅನಿಸಿಕೆ ಏನು? ಕಾಮೆಂಟ್ ಮೂಲಕ ತಿಳಿಸಿ

ಕ್ಷಣ ಕ್ಷಣದ ಮಾಹಿತಿಗಾಗಿ Vistara News FaceBook ಪೇಜ್ ಫಾಲೋ ಮಾಡಿ
ಮಹತ್ವದ ಮಾಹಿತಿಗಾಗಿ ವಿಸ್ತಾರ ನ್ಯೂಸ್ ಆ್ಯಪ್ ಉಚಿತವಾಗಿ ಡೌನ್ ಲೋಡ್ ಮಾಡಿಕೊಳ್ಳಿ: Andriod App | IOS App
Continue Reading
Click to comment

Leave a Reply

Your email address will not be published. Required fields are marked *

ಸಂಪಾದಕೀಯ

ವಿಸ್ತಾರ ಸಂಪಾದಕೀಯ: ಒಪ್ಪಿಕೊಂಡರೆ ಸಾಲದು, ಪಾಕ್‌ ತನ್ನನ್ನು ಸರಿಪಡಿಸಿಕೊಳ್ಳಲಿ

ಭಾರತವನ್ನು ದ್ವೇಷಿಸುತ್ತ ಪಾಕ್‌ ಹುಟ್ಟುಹಾಕಿದ ಮತಾಂಧ ಭಯೋತ್ಪಾದನೆ ಇಂದು ಅದನ್ನೇ ತಿನ್ನುತ್ತಿದೆ. ಇನ್ನಾದರೂ ಪಾಕ್ ಆಡಳಿತಗಾರರಿಗೆ, ಸೇನಾಧಿಕಾರಿಗಳಿಗೆ ಬುದ್ಧಿ ಬರಲಿ. ಕಾಶ್ಮೀರ ಮತ್ತಿತರ ವಿಚಾರಗಳನ್ನು ಪ್ರಸ್ತಾಪಿಸುತ್ತ ಭಾರತಕ್ಕೆ ಮುಜುಗರ ಸೃಷ್ಟಿಸಲು ವಿಫಲ ಪ್ರಯತ್ನ ಮಾಡುತ್ತಿರುವ ಪಾಕ್‌ ತನ್ನ ತಟ್ಟೆಯಲ್ಲಿ ಬಿದ್ದಿರುವ ಹೆಗ್ಗಣವನ್ನು ಮೊದಲು ಗಮನಿಸಲಿ.

VISTARANEWS.COM


on

Pakistan
Koo

ಕೆಲವು ದಿನಗಳ ಹಿಂದೆ ಪಾಕ್‌(Pakistan) ಸಂಸತ್‌ನಲ್ಲೇ ಅಲ್ಲಿನ ವಿಪಕ್ಷ ನಾಯಕನೇ ಭಾರತವನ್ನು ಹಾಡಿ ಹೊಗಳಿರುವ ವಿಡಿಯೋವೊಂದು ವೈರಲ್‌(Viral Video) ಆಗಿತ್ತು. ಇದೀಗ ಮತ್ತೊಬ್ಬ ಸಂಸದ ಭಾರತದ ಬಗ್ಗೆ ಮೆಚ್ಚುಗೆ ಮಾತುಗಳನ್ನಾಡಿದ್ದಾರೆ. ಸಂಸತ್‌ನಲ್ಲಿ ಮಾತನಾಡಿದ ಸಂಸದ ಸಯ್ಯದ್‌ ಮುಸ್ತಾಫಾ ಕಮಲ್‌ ಭಾರತ ಮತ್ತು ಪಾಕಿಸ್ತಾನವನ್ನು ಹೋಲಿಕೆ ಮಾಡಿ ಮಾತನಾಡಿದ್ದು, ಭಾರತ ಚಂದ್ರನ ಮೇಲೆ ಕಾಲಿಟ್ಟಿದೆ. ಆದರೆ ಪಾಕಿಸ್ತಾನದ ಸ್ಥಿತಿ ಹೇಗಿದೆ ನೋಡಿ ಎಂದು ಹೇಳಿದ್ದಾರೆ. ಇದೀಗ ಇವರ ಈ ವಿಡಿಯೋ ಸಾಮಾಜಿಕ ಜಾಲತಾಣದಲ್ಲಿ ವೈರಲ್‌ ಆಗಿದೆ. ಭಾರತ ಚಂದ್ರನ ಮೇಲೆ ಕಾಲಿಟ್ಟಿದೆ. ಆದರೆ ಪಾಕಿಸ್ತಾನ ಮಾತ್ರ ಮಕ್ಕಳು ಚರಂಡಿ ಬೀಳುತ್ತಿರುವ ಬಗ್ಗೆ ವರದಿ ಮಾಡುತ್ತಿದ್ದೇವೆ. ಕರಾಚಿಯಲ್ಲಿ ಜನ ಕುಡಿಯುವ ನೀರಿನ ಸಮಸ್ಯೆ ಎದುರಿಸುತ್ತಿದ್ದಾರೆ. ದೇಶದಲ್ಲಿ 2.6 ಕೋಟಿ ಮಕ್ಕಳಿದ್ದು, ಅವರಿಗೆ ಶಿಕ್ಷಣ ಸೌಲಭ್ಯವೂ ಸಿಗುತ್ತಿಲ್ಲ ಎಂದು ಕಳವಳ ವ್ಯಕ್ತಪಡಿಸಿದ್ದಾರೆ.

ಕೆಲವು ದಿನಗಳ ಹಿಂದೆ ಇಡೀ ಪ್ರಪಂಚದಲ್ಲೇ ಭಾರತ ಬಲಿಷ್ಠ ರಾಷ್ಟ್ರವಾಗಿ ಬೆಳೆಯುತ್ತಿದೆ. ನಾವು ಮಾತ್ರ ಹಣಕಾಸಿನ ಸಹಾಯಕ್ಕಾಗಿ ಭಿಕ್ಷೆ ಬೇಡುತ್ತಿದ್ದೇವೆ ಎಂದು ಪಾಕಿಸ್ತಾನದ ವಿಪಕ್ಷ ನಾಯಕ ಮೌಲಾನ ಫಜ್ಲೂರ್‌ ರೆಹಮಾನ್‌ ಹೇಳಿದ್ದರು. ಅವರು ಪಾಕಿಸ್ತಾನ ಸಂಸತ್‌ನಲ್ಲಿ ಸರ್ಕಾರ ವೈಫಲ್ಯದ ವಿರುದ್ಧ ವಾಗ್ದಾಳಿ ನಡೆಸುತ್ತಾ, ಭಾರತ ಜಾಗತಿಕ ಮಟ್ಟದಲ್ಲಿ ಸೂಪರ್‌ ಪವರ್‌ಫುಲ್‌ ರಾಷ್ಟ್ರವಾಗಿ ಬೆಳೆಯುತ್ತಿದೆ ಪಾಕಿಸ್ತಾನ ಮಾತ್ರ ದಿವಾಳಿತನದತ್ತ ಸಾಗುತ್ತಿದೆ. 1947ರಲ್ಲಿ ಭಾರತ ಮತ್ತು ಪಾಕಿಸ್ತಾನ ಸ್ವಾತಂತ್ರ್ಯ ಪಡೆದುಕೊಂಡಿತ್ತು. ಇಂದು ಭಾರತದ ಸ್ಥಿತಿ ಎಲ್ಲಿದೆ ಹಾಗೂ ನಮ್ಮ ಸ್ಥಿತಿ ಎಲ್ಲಿದೆ? ಇಷ್ಟಕ್ಕೆಲ್ಲಾ ಯಾರು ಹೊಣೆ ಎಂದು ಕಟುವಾಗಿ ಪ್ರಶ್ನಿಸಿದ್ದರು.

ಪಾಕಿಸ್ತಾನದ ವೈಫಲ್ಯಗಳ ಪಟ್ಟಿ ಮಾಡಹೊರಟರೆ ಮುಗಿಯುವುದೇ ಇಲ್ಲ. ಶುದ್ಧ ಕುಡಿಯುವ ನೀರು ಪೂರೈಸಲು ಸಾಧ್ಯವಾಗುತ್ತಿಲ್ಲ. ಸರಿಯಾದ ಆಧುನಿಕ ಶಿಕ್ಷಣ ಕಲಿಸುವ ಶಾಲೆಗಳಿಲ್ಲ. ಸಿಂಧ್‌ ಪ್ರಾಂತ್ಯದಲ್ಲಿ 70 ಲಕ್ಷ ಮಕ್ಕಳು ಶಾಲೆಗೆ ಹೋಗುತ್ತಿಲ್ಲ. ಅಲ್ಲಿ ಒಟ್ಟು 2.62 ಕೋಟಿ ಮಕ್ಕಳು ಶಾಲೆಗೆ ಹೋಗುತ್ತಿಲ್ಲ. ಮತಾಂಧತೆ ಕಲಿಸುವ ಮದ್ರಸ ಶಿಕ್ಷಣ ಮಾತ್ರ ವ್ಯಾಪಕವಾಗಿದೆ. ಹಣದುಬ್ಬರದ ಏರಿಕೆಯಿಂದಾಗಿ ಪಾಕಿಸ್ತಾನದಲ್ಲಿ ಅಗತ್ಯ ವಸ್ತುಗಳ ಬೆಲೆಯು ದಿನೇದಿನೆ ಜಾಸ್ತಿಯಾಗುತ್ತಿದ್ದು, ಜನ ಹೈರಾಣಾಗುತ್ತಿದ್ದಾರೆ. ಒಂದು ಲೀಟರ್‌ ಪೆಟ್ರೋಲ್‌ಗೆ 290 ರೂ. (ಪಾಕಿಸ್ತಾನದ ರೂಪಾಯಿ) ಆದರೆ, ಒಂದು ಕೆ.ಜಿ ಗೋಧಿ ಹಿಟ್ಟಿಗೆ 800 ರೂ. ಕೊಡಬೇಕಾಗಿದೆ. ಒಂದು ರೊಟ್ಟಿಗೆ 25 ರೂ. ನೀಡಬೇಕಾಗಿದೆ. ಇದರಿಂದಾಗಿ ಸಾಮಾನ್ಯ ಜನ ಮೂರು ಹೊತ್ತು ಊಟ ಮಾಡಲು ಕೂಡ ತೊಂದರೆಯಾಗುತ್ತಿದೆ. ಹಣಕಾಸಿನ ಕೊರತೆಯಿಂದ ಬಳಲುತ್ತಿರುವ ಪಾಕ್‌ನ ವಿದೇಶಿ ವಿನಿಮಯ ಮೀಸಲು ನಿಧಿ ಆಮದನ್ನು ಪೂರೈಸಲು ಸಾಕಾಗುತ್ತಿಲ್ಲ.

ಉಗ್ರರ ಪೋಷಣೆ, ಅವರಿಗೆ ಹಣಕಾಸು ನೆರವು, ಅಸಮರ್ಥ ನಾಯಕತ್ವ, ಕೊರೊನಾ ಬಿಕ್ಕಟ್ಟು ಸೇರಿ ಹಲವು ಕಾರಣಗಳಿಂದ ಪಾಕಿಸ್ತಾನ ದಿವಾಳಿಯಾಗಿದೆ. ಇದೇ ಕಾರಣಕ್ಕಾಗಿ ಅಂತಾರಾಷ್ಟ್ರೀಯ ಹಣಕಾಸು ಸಂಸ್ಥೆ (IMF) ಎದುರು ಹಣಕ್ಕಾಗಿ ಭಿಕ್ಷಾಪಾತ್ರೆ ಹಿಡಿದು ನಿಂತಿದೆ. ಈಗಾಗಲೇ ಐಎಂಎಫ್‌ 3 ಶತಕೋಟಿ ಡಾಲರ್‌ ಸಾಲ ನೀಡಲು ಒಪ್ಪಿಗೆ ಸೂಚಿಸಿದೆ. ಆದರೆ, ಮುಂದಿನ ಮೂರು ವರ್ಷಗಳವರೆಗೆ 6 ಶತಕೋಟಿ ಡಾಲರ್‌ ಸಾಲ ನೀಡಿ ಎಂದು ಪಾಕಿಸ್ತಾನ ಮನವಿ ಮಾಡುತ್ತಿದೆ. ಆದರೆ, ಪಾಕ್‌ನಲ್ಲಿ ದಿನೇದಿನೆ ಹಣದುಬ್ಬರದ ಏರಿಕೆಯಾಗುತ್ತಿರುವ ಕಾರಣ ಸಾಲ ನೀಡಲು ಐಎಂಎಫ್‌ ಹಿಂದೇಟು ಹಾಕುತ್ತಿದೆ. ಇದಕ್ಕಾಗಿಯೇ, ಆಡಳಿತ ಕಾರ್ಯತಂತ್ರದ ಘಟಕಗಳನ್ನು ಹೊರತುಪಡಿಸಿ ಎಲ್ಲ ಸರ್ಕಾರಿ ಸ್ವಾಮ್ಯದ ಉದ್ಯಮಗಳನ್ನು ಖಾಸಗೀಕರಣಗೊಳಿಸಲು ಮುಂದಾಗಿದೆ. ಐಎಂಎಫ್‌ ಪಾಕಿಸ್ತಾನಕ್ಕೆ ಸೂಚಿದ ಶಿಫಾರಸ್ಸಿನ ಪಟ್ಟಿಯಲ್ಲಿ ನಷ್ಟದಲ್ಲಿರುವ ಸರ್ಕಾರಿ ಉದ್ಯಮಗಳ ಖಾಸಗೀಕರಣವೂ ಸೇರಿದೆ.

ಭಾರತವನ್ನು ದ್ವೇಷಿಸುತ್ತ ಪಾಕ್‌ ಹುಟ್ಟುಹಾಕಿದ ಮತಾಂಧ ಭಯೋತ್ಪಾದನೆ ಇಂದು ಅದನ್ನೇ ತಿನ್ನುತ್ತಿದೆ. ಇನ್ನಾದರೂ ಪಾಕ್ ಆಡಳಿತಗಾರರಿಗೆ, ಸೇನಾಧಿಕಾರಿಗಳಿಗೆ ಬುದ್ಧಿ ಬರಲಿ. ಕಾಶ್ಮೀರ ಮತ್ತಿತರ ವಿಚಾರಗಳನ್ನು ಪ್ರಸ್ತಾಪಿಸುತ್ತ ಭಾರತಕ್ಕೆ ಮುಜುಗರ ಸೃಷ್ಟಿಸಲು ವಿಫಲ ಪ್ರಯತ್ನ ಮಾಡುತ್ತಿರುವ ಪಾಕ್‌ ತನ್ನ ತಟ್ಟೆಯಲ್ಲಿ ಬಿದ್ದಿರುವ ಹೆಗ್ಗಣವನ್ನು ಮೊದಲು ಗಮನಿಸಲಿ. ಅಲ್ಲಿನ ರಾಜಕೀಯ ನಾಯಕರೇ ತಮ್ಮ ಸ್ಥಿತಿಯನ್ನು ಪ್ರಾಮಾಣಿಕವಾಗಿ ಒಪ್ಪಿಕೊಂಡಾಗ, ತಿದ್ದಿಕೊಳ್ಳಲು ಸರಿಯಾದ ಕಾಲ ಬಂದಿದೆ ಎಂದರ್ಥ.

ಇದನ್ನೂ ಓದಿ: CAA: ಪಾಕಿಸ್ತಾನದಿಂದ ಬಂದ ಹಿಂದುಗಳಿಗೆ ಸಿಎಎ ಅನ್ವಯ ಭಾರತದ ಪೌರತ್ವ; ದೆಹಲಿಯಲ್ಲಿ ಸಂಭ್ರಮ, Video ಇಲ್ಲಿದೆ

Continue Reading

ಸಂಪಾದಕೀಯ

ವಿಸ್ತಾರ ಸಂಪಾದಕೀಯ: ಸಿಎಎ ಅನುಷ್ಠಾನ ಮೋದಿ ಸರ್ಕಾರದ ದಿಟ್ಟ ನಿರ್ಧಾರ

ಅಲ್ಪಸಂಖ್ಯಾತರನ್ನು ಗುರಿಯಾಗಿಸಲು ಸಿಎಎ ಮತ್ತು ಅಷ್ಟೇ ವಿವಾದಾತ್ಮಕ ಎನ್ಆರ್​​ಸಿ ಅಥವಾ ರಾಷ್ಟ್ರೀಯ ನಾಗರಿಕರ ನೋಂದಣಿಯನ್ನು ತರಲಾಗಿದೆ ಎಂಬ ಭಯವನ್ನು ಗೃಹ ಸಚಿವರು ಆಗಾಗ ಹೇಳಿಕೆಗಳ ಮೂಲಕ ನಿವಾರಿಸುತ್ತ ಬಂದಿದ್ದಾರೆ. ಸಿಎಎ ಬಗ್ಗೆ ಅಪಪ್ರಚಾರಗಳ ಮೂಲಕ ಈಗಲೂ ಮುಸ್ಲಿಮರನ್ನು ದಾರಿ ತಪ್ಪಿಸಲು ಯತ್ನಿಸಲಾಗುತ್ತಿದೆ. ಇದು ಯಾರ ಪೌರತ್ವವನ್ನೂ ಕಸಿದುಕೊಳ್ಳಲು ಇರುವುದಲ್ಲ.

VISTARANEWS.COM


on

CAA
Koo

ಭಾರಿ ಆಕ್ಷೇಪದ ಮಧ್ಯೆ ಕೇಂದ್ರ ಸರ್ಕಾರ ಜಾರಿಗೆ ತಂದಿರುವ ಪೌರತ್ವ ತಿದ್ದುಪಡಿ ಕಾಯ್ದೆಯಡಿ (ಸಿಎಎ) ಮೊದಲ ಕಂತಿನಲ್ಲಿ 14 ಜನರಿಗೆ ಭಾರತೀಯ ನಾಗರಿಕತ್ವವನ್ನು ನೀಡಲಾಗಿದೆ. ಎಲ್ಲರಿಗೂ ಪೌರತ್ವ ಪ್ರಮಾಣಪತ್ರವನ್ನು ಬುಧವಾರ ವಿತರಿಸಲಾಯಿತು. ಈ ಮೂಲಕ ಪಾಕಿಸ್ತಾನ, ಅಫ್ಘಾನಿಸ್ತಾನ ಮತ್ತು ಬಾಂಗ್ಲಾದೇಶದಿಂದ ಕಿರುಕುಳಕ್ಕೊಳಗಾದ ಮುಸ್ಲಿಮೇತರ ವಲಸಿಗರಿಗೆ ಭಾರತೀಯ ರಾಷ್ಟ್ರೀಯತೆ ನೀಡುವ ಪ್ರಕ್ರಿಯೆಗೆ ಕೇಂದ್ರ ಸರ್ಕಾರ ಅಧಿಕೃತ ಚಾಲನೆ ನೀಡಿದೆ. ದೆಹಲಿಯಲ್ಲಿ ಕೇಂದ್ರ ಗೃಹ ಕಾರ್ಯದರ್ಶಿ ಅಜಯ್ ಕುಮಾರ್ ಭಲ್ಲಾ ಅವರು, 14 ಜನರು ಆನ್​ಲೈನ್​ ಮೂಲಕ ಸಲ್ಲಿಸಿದ್ದ ಅರ್ಜಿಗಳನ್ನು ಪರಿಶೀಲಿಸಿದ ನಂತರ ಭಾರತೀಯ ಪೌರತ್ವ ನೀಡಿದ ಪ್ರಮಾಣಪತ್ರಗಳನ್ನು ಹಸ್ತಾಂತರಿಸಿದರು. ಜಿಲ್ಲಾ ಮಟ್ಟದ ಸಮಿತಿಗಳು ಗೊತ್ತುಪಡಿಸಿದ ಅಧಿಕಾರಿಗಳ ನೇತೃತ್ವದಲ್ಲಿ ದಾಖಲೆಗಳ ಪರಿಶೀಲನೆಯ ನಂತರ ಅರ್ಜಿಗಳನ್ನು ಅಖೈರು ಮಾಡಲಾಗಿದೆ.

ಸಂಸತ್ತಿನಲ್ಲಿ ಅಂಗೀಕರಿಸಲ್ಪಟ್ಟ ನಾಲ್ಕು ವರ್ಷಗಳ ನಂತರ ಕೇಂದ್ರ ಸರ್ಕಾರವು ಪೌರತ್ವ ತಿದ್ದುಪಡಿ ಕಾಯಿದೆಯನ್ನು ಈ ವರ್ಷ ಜಾರಿ ಮಾಡಿದೆ. ಬಾಂಗ್ಲಾದೇಶ, ಪಾಕಿಸ್ತಾನ ಮತ್ತು ಅಫ್ಘಾನಿಸ್ತಾನದಲ್ಲಿ ಕಿರುಕುಳಕ್ಕೊಳಗಾದ ಮುಸ್ಲಿಮೇತರ ವಲಸಿಗರು 2014ರ ಡಿಸೆಂಬರ್ 31ಕ್ಕೂ ಮೊದಲು ಭಾರತಕ್ಕೆ ಬಂದಿದ್ದಲ್ಲಿ ಅವರಿಗೆ ಭಾರತದ ನಾಗರಿಕತ್ವ ನೀಡಲು ಕೇಂದ್ರ ಸರ್ಕಾರ ಸಿಎಎ ಕಾಯ್ದೆ ಜಾರಿಗೆ ತಂದಿದೆ. 2019ರಲ್ಲಿ ಕಾಯ್ದೆಯನ್ನು ಜಾರಿಗೊಳಿಸಲಾಗಿದೆ. ಇದರಲ್ಲಿ ಹಿಂದೂಗಳು, ಸಿಖ್ಖರು, ಜೈನರು, ಬೌದ್ಧರು, ಪಾರ್ಸಿಗಳು ಮತ್ತು ಕ್ರಿಶ್ಚಿಯನ್ನರು ಕಾಯ್ದೆಯಡಿ ಬರುತ್ತಾರೆ. 2019ರಲ್ಲಿ ಜಾರಿಯಾದರೂ ಇದರ ನಿಯಮಗಳನ್ನು ರೂಪಿಸಲು ಸರ್ಕಾರ 4 ವರ್ಷ ಸಮಯಾವಕಾಶ ತೆಗೆದುಕೊಂಡಿತು. 2024ರ ಮಾರ್ಚ್ 11ರಂದು ಅಧಿಕೃತ ನಿಯಮಾವಳಿಗಳನ್ನು ರೂಪಿಸಿ ಆದೇಶ ಹೊರಡಿಸಿತು. ನಿಗದಿಪಡಿಸಿದ ಪೋರ್ಟಲ್​ ಮೂಲಕ ಆನ್​ಲೈನ್​ನಲ್ಲಿ ಅರ್ಜಿ ಸಲ್ಲಿಸಬಹುದು. ಇವುಗಳನ್ನು ಜಿಲ್ಲಾ ಮಟ್ಟದ ಸಮಿತಿ (ಡಿಎಲ್​ಸಿ), ರಾಜ್ಯ ಮಟ್ಟದ ಸಶಕ್ತ ಸಮಿತಿಯಿಂದ (ಇಸಿ) ಪರಿಶೀಲನೆ ಮಾಡಿದ ಬಳಿಕ ಪೌರತ್ವ ನೀಡಬೇಕೆ ಬೇಡವೇ ಎಂಬುದನ್ನು ನಿರ್ಧರಿಸಲಾಗುತ್ತದೆ.

ಇದೊಂದು ಐತಿಹಾಸಿಕ ಘಟ್ಟ. ಇತಿಹಾಸದ ಸಂಕಷ್ಟಗಳಲ್ಲಿ ನೊಂದವರು ಒಂದು ನೆಲೆಯನ್ನು ಪಡೆಯಲು ಇಂದು ಸಾಧ್ಯವಾಗಿದೆ. ಯಥಾಪ್ರಕಾರ, ಕೇಂದ್ರ ಸರ್ಕಾರದ ಎದುರಾಳಿಗಳು ಈ ಕ್ರಮವನ್ನು ಹಳಿಯುತ್ತಿದ್ದಾರೆ. ಇದು ಸಂಸತ್​ನಲ್ಲಿ ಅಂಗೀಕಾರಗೊಂಡಾಗ ದೆಹಲಿಯಯಲ್ಲಿ ಮತ್ತು ಅಸ್ಸಾಂನಲ್ಲಿ ಭಾರಿ ಪ್ರತಿಭಟನೆಗಳು ನಡೆದಿದ್ದವು. ಇದೀಗ ಸರ್ಕಾರ ಎಲ್ಲ ಸಿದ್ಧತೆಗಳ ಬಳಿಕ ಜಾರಿಗೆ ತಂದಿದೆ. ಪಶ್ಚಿಮ ಬಂಗಾಳ, ಕೇರಳದಂಥ ಕೆಲವು ರಾಜ್ಯಗಳು ಇದನ್ನು ಜಾರಿಗೆ ತರುವುದಿಲ್ಲ ಎಂದು ಹೇಳಿದ್ದೂ ಉಂಟು. ಆದರೆ ಕಾಲಕ್ರಮೇಣ ಇದರ ಕುರಿತು ಇದ್ದ ಪ್ರತಿಭಟನೆಯ ಅಂಶ ಕಡಿಮೆಯಾಗಿದೆ. ಆದರೆ ಇದರ ಬಗೆಗೆ ಕೆಲವು ವಲಯದಲ್ಲಿ ಇನ್ನೂ ತಪ್ಪು ಕಲ್ಪನೆ ಉಳಿದಂತಿದೆ. ಇದು ನಿವಾರಣೆ ಆಗುವುದು ಮತ್ತು ಎಲ್ಲರೂ ಇದರ ಜಾರಿಗೆ ಸಹಕರಿಸುವುದು ಮುಖ್ಯ.

ಅಲ್ಪಸಂಖ್ಯಾತರನ್ನು ಗುರಿಯಾಗಿಸಲು ಸಿಎಎ ಮತ್ತು ಅಷ್ಟೇ ವಿವಾದಾತ್ಮಕ ಎನ್ಆರ್​​ಸಿ ಅಥವಾ ರಾಷ್ಟ್ರೀಯ ನಾಗರಿಕರ ನೋಂದಣಿಯನ್ನು ತರಲಾಗಿದೆ ಎಂಬ ಭಯವನ್ನು ಗೃಹ ಸಚಿವರು ಆಗಾಗ ಹೇಳಿಕೆಗಳ ಮೂಲಕ ನಿವಾರಿಸುತ್ತ ಬಂದಿದ್ದಾರೆ. ಸಿಎಎ ಬಗ್ಗೆ ಅಪಪ್ರಚಾರಗಳ ಮೂಲಕ ಈಗಲೂ ಮುಸ್ಲಿಮರನ್ನು ದಾರಿ ತಪ್ಪಿಸಲು ಯತ್ನಿಸಲಾಗುತ್ತಿದೆ. ಇದು ಪಾಕಿಸ್ತಾನ, ಅಫ್ಘಾನಿಸ್ತಾನ ಮತ್ತು ಬಾಂಗ್ಲಾದೇಶದಲ್ಲಿ ಕಿರುಕುಳವನ್ನು ಎದುರಿಸಿ ಭಾರತಕ್ಕೆ ಬಂದವರಿಗೆ ಮಾತ್ರ ಪೌರತ್ವ ನೀಡುವ ಉದ್ದೇಶವನ್ನು ಹೊಂದಿದೆ. ಇದು ಯಾರ ಪೌರತ್ವವನ್ನೂ ಕಸಿದುಕೊಳ್ಳಲು ಇರುವುದಲ್ಲ. ಈ ಕಾಯ್ದೆಯಲ್ಲಿ ಮುಸ್ಲಿಮರನ್ನು ಕೈಬಿಟ್ಟ ಕಾರಣ ವಿರೋಧ ಪಕ್ಷಗಳಿಂದ ಮತ್ತು ಮುಸ್ಲಿಂ ಸಮುದಾಯದಿಂದ ಭಾರಿ ವಿರೋಧ ವ್ಯಕ್ತವಾಗಿತ್ತು. ಆದರೆ ಇದರಲ್ಲಿ ಹುರುಳಿಲ್ಲ. ಮುಸ್ಲಿಮರಿಗೂ ಈ ಕಾಯಿದೆಗೂ ಯಾವುದೇ ಸಂಬಂಧವಿಲ್ಲ.

ಹಿಂದೂ, ಸಿಖ್, ಬೌದ್ಧರಿಗೆ ಭಾರತ ಹೊರತುಪಡಿಸಿ ಪೌರತ್ವ ಪಡೆಯಲು ಬೇರೆ ದೇಶಗಳೇ ಇಲ್ಲ. ಇತಿಹಾಸವನ್ನು ನೋಡಿದರೆ, ಭಾರತ, ಅಫ್ಘಾನಿಸ್ಥಾನ, ಪಾಕಿಸ್ಥಾನ ಮತ್ತು ಬಾಂಗ್ಲಾದೇಶದ ಗಡಿಯುದ್ದಕ್ಕೂ ವಲಸೆ ನಡೆದಿರುವುದು ತಿಳಿಯುತ್ತದೆ. ಧರ್ಮದ ಕಾರಣಕ್ಕಾಗಿ ದೌರ್ಜನ್ಯಕ್ಕೆ ಒಳಗಾಗಿ ಭಾರತಕ್ಕೆ ಆಶ್ರಯ ಕೋರಿ ಬಂದಿರುವ ಸಮುದಾಯಗಳಲ್ಲಿ ಅನೇಕರ ಟ್ರಾವೆಲ್‌ ಡಾಕ್ಯುಮೆಂಟ್‌ಗಳ ಅವಧಿ ಮುಗಿದಿದೆ ಅಥವಾ ಅಪೂರ್ಣ ದಾಖಲೆಗಳಿವೆ ಅಥವಾ ಅವರ ಬಳಿ ದಾಖಲೆಗಳೇ ಇಲ್ಲ. ಮೋದಿ ಸರ್ಕಾರವು ತನ್ನ ಮೊದಲನೇ ಅವಧಿಯಲ್ಲಿ ಈ ರೀತಿಯ ವಲಸಿಗರಿಗೆ ಪಾಸ್‌ಪೋರ್ಟ್‌ ಅಧಿನಿಯಮ (ಭಾರತ ಪ್ರವೇಶಕ್ಕೆ) 1920ರ ಹಾಗೂ ವಿದೇಶಿ ಅಧಿನಿಯಮ 1946ರ ಪ್ರತಿಕೂಲ ದಂಡನಾರ್ಹ ಅಂಶಗಳಿಂದಲೂ ವಿನಾಯಿತಿ ನೀಡಿದೆ. ಇದಷ್ಟೇ ಅಲ್ಲದೇ 2016ರಲ್ಲಿ ಮೋದಿ ಸರ್ಕಾರ ಈ ನಿರಾಶ್ರಿತರಿಗೆ ದೀರ್ಘ‌ಕಾಲಿಕ ವೀಸಾ ಪಡೆಯಲೂ ಅರ್ಹರನ್ನಾಗಿಸಿದೆ. ಪೌರತ್ವ ತಿದ್ದುಪಡಿ ಕಾಯ್ದೆಯು ಒಟ್ಟಲ್ಲಿ, ಧಾರ್ಮಿಕ ಹಿಂಸೆಗೆ ತುತ್ತಾಗಿರುವವರಿಗೆ ನಾಗರಿಕತೆ ದೊರಕುವಂತೆ ಮಾಡಲು ಸಶಕ್ತಗೊಳಿಸುತ್ತದೆ.

ಸಂವಿಧಾನದ ಅನುಚ್ಛೇದ 25, ಪ್ರತಿಯೊಬ್ಬ ವ್ಯಕ್ತಿಗೂ ತನಗೆ ಇಷ್ಟವಾದ ಧರ್ಮವನ್ನು ಮುಕ್ತವಾಗಿ ಅನುಸರಿಸಲು, ಆಚರಿಸಲು ಸಮಾನ ಹಕ್ಕನ್ನು ನೀಡುತ್ತದೆ. ಪೌರತ್ವ ತಿದ್ದುಪಡಿ ಕಾಯ್ದೆಯು ಯಾವುದೇ ರೀತಿಯಲ್ಲೂ ಈ ಅಂಶಗಳನ್ನು ಉಲ್ಲಂಘಿಸಿಲ್ಲ. ಸಿಎಎಯಿಂದಾಗಿ ಭಾರತೀಯ ಅಲ್ಪಸಂಖ್ಯಾತರ ಹಕ್ಕುಗಳ, ಭಾರತೀಯ ಜಾತ್ಯತೀತ ಮೌಲ್ಯಗಳ ಮತ್ತು ಸಂಪ್ರದಾಯಗಳ ಹನನವಾಗುವುದಿಲ್ಲ ಎಂದು ಪ್ರಧಾನಿ ಸ್ಪಷ್ಟಪಡಿಸಿದ್ದಾರೆ. ಸಿಎಎ ಎನ್ನುವುದು ಅನ್ಯಾಯವನ್ನು ಎದುರಿಸುತ್ತಿರುವ ಸಾವಿರಾರು ನಿರ್ವಸಿತ ಕುಟುಂಬಗಳನ್ನು ಸಬಲೀಕರಣಗೊಳಿಸುವ ಐತಿಹಾಸಿಕ ಹೆಜ್ಜೆಯಾಗಿದೆ. ಇದು ಸಮರ್ಪಕವಾಗಿ ಅನುಷ್ಠಾನಕ್ಕೂ ಬರುತ್ತಿದೆ ಎಂದು ಸಂತೋಷಪಡೋಣ.

ಇದನ್ನೂ ಓದಿ: CAA: ಸಿಎಎ ಕಾಯ್ದೆಯಡಿ 14 ವಲಸಿಗರಿಗೆ ಭಾರತದ ಪೌರತ್ವ; ಏನಿದು ಕಾಯ್ದೆ? ಭಾರತದ ಮುಸ್ಲಿಮರಿಗೆ ತೊಂದರೆ ಇದೆಯೇ?

Continue Reading

ಪ್ರಮುಖ ಸುದ್ದಿ

ವಿಸ್ತಾರ ಸಂಪಾದಕೀಯ: ರಾಜ್ಯ ಪ್ರಾಥಮಿಕ- ಪ್ರೌಢಶಾಲಾ ಶಿಕ್ಷಣದ ಪರಿಸ್ಥಿತಿ ಸರಿಹೋಗುವುದೆಂದು?

SSLC Result: ಶಾಲೆಗಳನ್ನು ಪ್ರಯೋಗಶಾಲೆಗಳಂತೆ ನೋಡುವ ಮನಸ್ಥಿತಿ ಪ್ರತಿಯೊಂದು ಸರಕಾರದ್ದಾಗಿದೆ. ಇದಕ್ಕೆ ಇತ್ತೀಚೆಗೆ ಪದವಿ ಶಿಕ್ಷಣದಲ್ಲಿ ಮಾಡುತ್ತಿರುವ ಬದಲಾವಣೆಯೇ ದೃಷ್ಟಾಂತ. ನಾಲ್ಕು ವರ್ಷಗಳ ಪದವಿಯನ್ನು ಮತ್ತೆ ಮೂರು ವರ್ಷಕ್ಕೆ ಇಳಿಸಿರುವ ಈ ಕ್ರಮದಿಂದಾಗಿ, ರಾಜ್ಯ ಶಿಕ್ಷಣ ವ್ಯವಸ್ಥೆಯು ರಾಷ್ಟ್ರೀಯ ಶಿಕ್ಷಣ ನೀತಿಯಿಂದ ಪ್ರತ್ಯೇಕತೆ ಕಾಪಾಡಿಕೊಂಡು, ಎನ್‌ಇಪಿಯಿಂದ ದೊರೆಯಬಹುದಾದ ಲಾಭಗಳಿಂದ ವಂಚಿತವಾಗಲಿದೆ.

VISTARANEWS.COM


on

SSLC Result
Koo

ಈ ವರ್ಷದ ಎಸ್‌ಎಸ್‌ಎಲ್‌ಸಿ ಫಲಿತಾಂಶ ಬಂದ ಬಳಿಕ, ಊಹಿಸಿದಂತೆಯೇ ಆಗಿದೆ. ಕರ್ನಾಟಕದಲ್ಲಿ ಶಾಲಾ ಶಿಕ್ಷಣದ ಗುಣಮಟ್ಟದ ಬಗ್ಗೆ ಚರ್ಚೆ ಎದ್ದಿದೆ. ಶಿಕ್ಷಣ ಇಲಾಖೆಯ ಅಧಿಕಾರಿಗಳ ಬೇಜವಾಬ್ದಾರಿಯಿಂದ ಪ್ರಸ್ತುತ ಪ್ರಾಥಮಿಕ ಹಾಗೂ ಪ್ರೌಢ ಹಂತದಲ್ಲಿ ಕಲಿಕೆಯ ಗುಣಮಟ್ಟ ಕುಸಿದಿದೆ (SSLC Result) ಎಂದು ಖಾಸಗಿ ಶಾಲಾ ಒಕ್ಕೂಟ (ಕ್ಯಾಮ್ಸ್) ಅಸಮಾಧಾನ ಹೊರಹಾಕಿದೆ. ಸರ್ಕಾರಿ ಶಾಲಾ ಶಿಕ್ಷಣದ ಬಗ್ಗೆ ಹೆತ್ತವರು ಯಾವ ಅಭಿಪ್ರಾಯ ಹೊಂದಿದ್ದಾರೆ ಎಂಬುದನ್ನು ಸಂಕಲಿಸಿದರೆ ದಾರುಣ ಚಿತ್ರ ಸಿಗಬಹುದು; ಸರ್ಕಾರಿ ಶಾಲೆಯಲ್ಲಿ ಕಲಿಯುತ್ತಿರುವ ಮಕ್ಕಳ ಹೆತ್ತವರು ಕೆಳಮಧ್ಯಮ ವರ್ಗದ, ಕೆಳವರ್ಗದವರಾದುದರಿಂದ ಅವರಿಗೆ ಬೇರೆ ದಾರಿಯಿಲ್ಲ. ಖಾಸಗಿ ಶಾಲೆಗಳಿಗೆ ಮಕ್ಕಳನ್ನು ಕಳಿಸುತ್ತಿರುವವರು, ಅಲ್ಲಿಗೆ ಕಳಿಸುತ್ತಿರುವುದೇಕೆ ಎಂದು ಕೇಳಿದರೆ ಸರ್ಕಾರಿ ಶಿಕ್ಷಣದ ಕಳಪೆ ಗುಣಮಟ್ಟದತ್ತ ಬೆಟ್ಟು ಮಾಡುತ್ತಾರೆ. ಆದರೆ ಇದೂ ಪೂರ್ತಿ ಸತ್ಯವಲ್ಲ. ಯಾಕೆಂದರೆ ಹಲವಾರು ಅನುದಾನಿತ, ಅನುದಾನರಹಿತ ಶಾಲೆಗಳಲ್ಲಿ ಶೂನ್ಯ ಫಲಿತಾಂಶ ಬಂದಿದೆ. ಇದು ಒಟ್ಟಾರೆಯಾಗಿ ರಾಜ್ಯ ಶೈಕ್ಷಣಿಕ ಪಠ್ಯದ ಸಮಸ್ಯೆಗಳತ್ತ ಬೆಟ್ಟು ಮಾಡುತ್ತದೆ. ಒಟ್ಟಾರೆಯಾಗಿ ಪಠ್ಯದ ಸಮಸ್ಯೆ ಹಾಗೂ ಕಲಿಕೆಯ ಸಮಸ್ಯೆಗಳು ಒಗ್ಗೂಡಿ ಇಂದಿನ ಈ ಸ್ಥಿತಿಗೆ ತಂದಿವೆ.

ಸರ್ಕಾರ ಶಾಲಾ ಶಿಕ್ಷಣದ ಗುಣಮಟ್ಟ ಹೆಚ್ಚಿಸುವಲ್ಲಿ ಸರ್ಕಾರ ಯಾವುದೇ ಪರಿಣಾಮಕಾರಿ ರೂಪುರೇಷೆಗಳನ್ನು ರೂಪಿಸುತ್ತಿಲ್ಲ. ಬದಲಿಗೆ ಶಿಕ್ಷಣ ಇಲಾಖೆ ದಿನಕ್ಕೊಂದು ನಿಯಮಗಳನ್ನು ಮಾಡುತ್ತಿದೆ. ಆದರೆ ತಾವೇ ನಡೆಸುವ ಸರ್ಕಾರಿ ಶಾಲೆಗಳಲ್ಲಿ ಅನುಷ್ಠಾನ ಮಾಡದೇ, ಕೇವಲ ಖಾಸಗಿ ಅನುದಾನರಹಿತ ಶಿಕ್ಷಣ ಸಂಸ್ಥೆಗಳಿಗೆ ಮಾತ್ರ ನಿಯಮ ಎಂಬಂತೆ ವರ್ತಿಸುತ್ತಿದೆ ಎಂದು ಶಾಲಾ ಒಕ್ಕೂಟ ಆಕ್ರೋಶ ಹೊರಹಾಕಿದೆ. ಇದೂ ನಿಜ. ಶಾಲೆಗಳನ್ನು ಪ್ರಯೋಗಶಾಲೆಗಳಂತೆ ನೋಡುವ ಮನಸ್ಥಿತಿ ಪ್ರತಿಯೊಂದು ಸರಕಾರದ್ದಾಗಿದೆ. ಇದಕ್ಕೆ ಇತ್ತೀಚೆಗೆ ಪದವಿ ಶಿಕ್ಷಣದಲ್ಲಿ ಮಾಡುತ್ತಿರುವ ಬದಲಾವಣೆಯೇ ದೃಷ್ಟಾಂತ. ನಾಲ್ಕು ವರ್ಷಗಳ ಪದವಿಯನ್ನು ಮತ್ತೆ ಮೂರು ವರ್ಷಕ್ಕೆ ಇಳಿಸಿರುವ ಈ ಕ್ರಮದಿಂದಾಗಿ, ರಾಜ್ಯ ಶಿಕ್ಷಣ ವ್ಯವಸ್ಥೆಯು ರಾಷ್ಟ್ರೀಯ ಶಿಕ್ಷಣ ನೀತಿಯಿಂದ ಪ್ರತ್ಯೇಕತೆ ಕಾಪಾಡಿಕೊಂಡು, ಎನ್‌ಇಪಿಯಿಂದ ದೊರೆಯಬಹುದಾದ ಲಾಭಗಳಿಂದ ವಂಚಿತವಾಗಲಿದೆ.

ರಾಜ್ಯದಲ್ಲಿ ಪ್ರಾಥಮಿಕ ಹಂತದಲ್ಲೆ ಶಿಕ್ಷಣದ ಗುಣಮಟ್ಟ ಕಾಪಾಡದೇ ಇರುವುದರಿಂದಲೇ ಎಸ್‌ಎಸ್‌ಎಲ್‌ಸಿ ಪರೀಕ್ಷೆ ಫಲಿತಾಂಶದಲ್ಲಿ ಕುಸಿತ ಉಂಟಾಗಿದೆ. 2024ನೇ ಸಾಲಿನ ಎಸ್‌ಎಸ್‌ಎಲ್‌ಸಿ ಪರೀಕ್ಷೆಯ ಫಲಿತಾಂಶ ನಿರಾಶದಾಯವಾಗಿದೆ. ಸಿಸಿಟಿವಿ ಹಾಕಿದ್ದಕ್ಕೆ ಫಲಿತಾಂಶ ಕಡಿಮೆ ಬಂದಿದೆ ಎಂದು ಶಾಲಾ ಶಿಕ್ಷಣ ಇಲಾಖೆಯೇ ಒಪ್ಪಿಕೊಂಡಿದೆ. ಅಧಿಕಾರಿಗಳ ಬಳಿ ಚರ್ಚೆ ಮಾಡಿದಾಗ, ಮಕ್ಕಳು ತುಂಬಾ ಒತ್ತಡಕ್ಕೆ ಒಳಗಾಗುತ್ತಿದ್ದಾರೆ. ಹೀಗಾಗಿ ಅವರನ್ನು ಪಾಸ್ ಮಾಡಬೇಕು ಎನ್ನುತ್ತಾರೆ. ಹೀಗಾಗಿ ಗ್ರೇಸ್‌ ಅಂಕ ಕೊಡಲಾಗಿದೆ. ಹತ್ತು ವರ್ಷಗಳಿಂದ ಶಾಲೆಯಲ್ಲಿ ಕಲಿತರೂ 10ನೇ ತರಗತಿಗೆ ಬಂದಾಗ ಕನಿಷ್ಠ 25 ಅಂಕ ಗಳಿಸಲೂ ಆಗದ ಮಕ್ಕಳ ಸಂಖ್ಯೆ ಹೆಚ್ಚು ಇದೆ ಎಂದರೆ ಏನರ್ಥ? ಇದು ಶಿಕ್ಷಣವೇ? ಶಿಕ್ಷಣದ ಗುಣಮಟ್ಟ ಹೆಚ್ಚಿಸುವ ಬದಲು ಮಕ್ಕಳ ಹಿತದೃಷ್ಟಿಯ ಹೆಸರಲ್ಲಿ ಗ್ರೇಸ್‌ ಅಂಕದ ಪ್ರಮಾಣ ಹೆಚ್ಚಿಸುತ್ತಿರುವುದು ಸರಿಯಲ್ಲ. ಇದು ಕ್ರಿಕೆಟ್‌ನಲ್ಲಿ ಬೌಂಡರಿಗೆ ಬಾಲ್‌ ಹೋಗುತ್ತಿಲ್ಲ ಎಂದು ಬೌಂಡರಿ ವ್ಯಾಪ್ತಿಯನ್ನೇ ಕುಗ್ಗಿಸಿದಂತೆ! ಇದರಿಂದ ಆಟಗಾರರ ಪ್ರತಿಭೆಯೇನೂ ಹೆಚ್ಚುವುದಿಲ್ಲ!

ಇದನ್ನೂ ಓದಿ:ವಿಸ್ತಾರ ಸಂಪಾದಕೀಯ: ಹೋರ್ಡಿಂಗ್ ಕುಸಿತ ಬೆಂಗಳೂರಿಗರಿಗೂ ಎಚ್ಚರಿಕೆಯ ಗಂಟೆ

ಪ್ರತಿ ಸಲ ಸರ್ಕಾರ ಬಂದಾಗಲೂ ರಾಜಕೀಯ ಸಿದ್ಧಾಂತದ ಹಿನ್ನೆಲೆಯಲ್ಲಿ ಪಠ್ಯಕ್ರಮ ಪರಿಷ್ಕರಣೆ ಆಗುತ್ತಿದೆ. ಕಳೆದ ಹತ್ತಾರು ವರ್ಷಗಳಿಂದ ಇದೇ ರೀತಿ ನಡೆದುಕೊಂಡು ಬರುತ್ತಿದೆ. ಶಿಕ್ಷಣ ಇಲಾಖೆಯಿಂದ ಗುಣಮಟ್ಟದ ಪಠ್ಯ ಪುಸ್ತಕ ರಚನೆ ಆಗದೇ ಇದ್ದಲ್ಲಿ ಇದರ ಅಡ್ಡಪರಿಣಾಮವನ್ನು ಮುಂದೆ ಅನುಭವಿಸಬೇಕಾಗುತ್ತದೆ. ಮಕ್ಕಳಿಗೆ ಬೇಕಾದಂತಹ ಸಂಯೋಜಿತ ಪಠ್ಯ ರಚನೆಯಾಗದೆ ಇದ್ದರೆ, ಪೋಷಕರು ಅನಿವಾರ್ಯವಾಗಿ CBSE-ICSE ಕಡೆ ಹೋಗಬೇಕಾಗುತ್ತದೆ. ರಾಜ್ಯದ ವಿದ್ಯಾರ್ಥಿಗಳು ನೆರೆಹೊರೆ ರಾಜ್ಯಗಳ ಪಠ್ಯಕ್ಕೆ ಹಾಗೂ ರಾಷ್ಟ್ರಮಟ್ಟದ ಶಿಕ್ಷಣಕ್ಕೆ ಸ್ಪರ್ಧಾತ್ಮಕವಾಗಿ ಸಿದ್ಧ ಮಾಡುವುದು ಸರ್ಕಾರದ ಆದ್ಯ ಜವಾಬ್ದಾರಿ. ಆದರೆ ಈ ವಿಚಾರದಲ್ಲಿ ಸದಾ ರಾಜಕೀಯ. ವಿದ್ಯಾರ್ಥಿಗಳ ಹಿತದೃಷ್ಟಿಗಿಂತ ತಮ್ಮ ಸಿದ್ಧಾಂತಗಳನ್ನು ಹೇರುವುದೇ ಪಕ್ಷಗಳ ಆದ್ಯತೆಯಾಗಿದೆ. ಶಿಕ್ಷಣ ತಜ್ಞರನ್ನು ಮುಂದಿಟ್ಟುಕೊಂಡು ಪಠ್ಯಕ್ರಮ ರಚಿಸುವುದಕ್ಕಿಂತಲೂ ರಾಜಕೀಯ ಚಿಂತನೆಯ ತಜ್ಞರನ್ನು ಸಮಿತಿಯಲ್ಲಿ ನೇಮಿಸಿಕೊಂಡು ಪಠ್ಯ ರಚಿಸಲಾಗುತ್ತಿದೆ. ಇದು ಮಕ್ಕಳ ಬಾಳಿನಲ್ಲಿ ಆಡುವ ಚೆಲ್ಲಾಟ. ಇದು ನಿಲ್ಲಬೇಕು. ಇಲ್ಲವಾದರೆ ಈ ಫಲಿತಾಂಶ ಕುಸಿತ ಹಾಗೂ ಅವಮಾನ ಮುಂದುವರಿಯಲಿದೆ.

Continue Reading

ಸಂಪಾದಕೀಯ

ವಿಸ್ತಾರ ಸಂಪಾದಕೀಯ: ಹೋರ್ಡಿಂಗ್ ಕುಸಿತ ಬೆಂಗಳೂರಿಗರಿಗೂ ಎಚ್ಚರಿಕೆಯ ಗಂಟೆ

ಬೆಂಗಳೂರಿನಲ್ಲೂ ಇಂಥ ಜಾಹೀರಾತು ಫಲಕಗಳ ಹಾವಳಿ ಸಾಕಷ್ಟಿದೆ. ಇವುಗಳಲ್ಲಿ ಅನಧಿಕೃತ ಎಷ್ಟು, ಅನಧಿಕೃತ ಎಷ್ಟು ಯಾರೂ ಹೇಳಲಾರರು. ಕಳೆದ ವರ್ಷ ಹೈಕೋರ್ಟ್, ಅನಧಿಕೃತ ಫ್ಲೆಕ್ಸ್, ಬ್ಯಾನರ್, ಹೋರ್ಡಿಂಗ್‌ಗಳ ಬಗ್ಗೆ ಬಿಬಿಎಂಪಿಯನ್ನು ತರಾಟೆಗೆ ತೆಗೆದುಕೊಂಡಿತ್ತು. ಪರಿಣಾಮ ನಗರವನ್ನು ತರಾತುರಿಯಿಂದ ಕ್ಲೀನ್ ಮಾಡಲಾಗಿತ್ತು. ಇದೀಗ ಬಿಬಿಎಂಪಿ ನೂತನ ಬೈಲಾ ತಂದಿದೆ. ಅದರಂತೆ ದೊಡ್ಡ ಹೋರ್ಡಿಂಗ್‌ಗಳಿಗೆ ಅವಕಾಶ ಕಲ್ಪಿಸಲಾಗುತ್ತಿದೆ. ಇದರ ಅಪಾಯ ಇದ್ದೇ ಇದೆ.

VISTARANEWS.COM


on

Hoarding
Koo

ಮುಂಬಯಿಯ ಘಾಟ್‌ಕೋಪರ್‌ನಲ್ಲಿ ಅಪ್ಪಳಿಸಿದ ಭಾರಿ ಧೂಳು ಬಿರುಗಾಳಿ ಮತ್ತು ಮಳೆಯಿಂದಾಗಿ ಬೃಹತ್ ಜಾಹೀರಾತು ಫಲಕ ಕುಸಿದು 14 ಮಂದಿ ಸಾವನ್ನಪ್ಪಿದ್ದಾರೆ. 59 ಜನರು ಗಾಯಗೊಂಡಿದ್ದಾರೆ. ಸೋಮವಾರ ಮಧ್ಯಾಹ್ನ ವೇಗವಾಗಿ ಧೂಳಿನ ಸಮೇತ ಬಂದ ಬಿರುಗಾಳಿ, ಭಾರೀ ಮಳೆ ಹಿನ್ನೆಲೆ ಮುಂಬೈ ನಗರದಲ್ಲಿ ಅನಾಹುತಗಳು ಸಂಭವಿಸುತ್ತಿವೆ. ಜನಸಂದಣಿ ಇರುವ ಪ್ರದೇಶದಲ್ಲಿ ಬೃಹದಾಕಾರದ ಹೋರ್ಡಿಂಗ್ ಬಿರುಗಾಳಿಗೆ ಕುಸಿದು ಬಿದ್ದಿದೆ. ಬೃಹದಾಕಾರದ ಹೋರ್ಡಿಂಗ್ ನ ಕಬ್ಬಿಣದ ರಾಡ್ ಗಳು ಹಿಂದಕ್ಕೆ ವಾಲಿಕೊಂಡು ಸಂಪೂರ್ಣವಾಗಿ ನೆಲಕಚ್ಚಿದೆ. ದುರ್ಘಟನೆಯಲ್ಲಿ ನೂರಕ್ಕೂ ಹೆಚ್ಚು ಮಂದಿ ಹೋರ್ಡಿಂಗ್​ ಕೆಳಗೆ ಸಿಲುಕಿಕೊಂಡಿದ್ದಾರೆ. ಹೋರ್ಡಿಂಗ್ ಬಿದ್ದ ಪರಿಣಾಮ ಅಲ್ಲಿದ್ದ ಅಂಗಡಿಗಳು, ವಾಹನಗಳು ಸಹ ಜಖಂ ಆಗಿದೆ. ಇನ್ನೊಂದು ಇಂಥದೇ ಘಟನೆಯಲ್ಲಿ, ವಡಾಲಾದಲ್ಲಿ ಅಟ್ಟಣಿಗೆಯೊಂದು ಕುಸಿದಿದೆ. ಹಲವಾರು ವಾಹನಗಳನ್ನು ರಸ್ತೆ ಬದಿಯಲ್ಲಿ ನಿಲ್ಲಿಸಲಾಗಿದ್ದು, ಹಲವರು ಕಾರಿನೊಳಗೆ ಸಿಲುಕಿಕೊಂಡಿದ್ದಾರೆ.

ಇದು ಅಪರೂಪದ ಪ್ರಕರಣವಲ್ಲ. ಈ ಹಿಂದೆಯೂ ಇಂಥ ಘಟನೆಗಳು ಆದದ್ದುಂಟು. ಈ ಬೃಹತ್ ಜಾಹೀರಾತು ಫಲಕಗಳು ನಾಲ್ಕು- ಐದು ಮಹಡಿ ಕಟ್ಟಡಗಳಷ್ಟು ಎತ್ತರವಾಗಿರುತ್ತವೆ. ವೈಜ್ಞಾನಿಕವಾಗಿ ಇದನ್ನು ನಿರ್ಮಿಸದೇ ಹೋದರೆ ಇವು ಬಿದ್ದಾಗ ಹಲವು ಜೀವಗಳಿಗೆ ಮಾರಣಾಂತಿಕ ಆಗುವ ಸಂಭವ ಇದ್ದೇ ಇರುತ್ತದೆ. ಜೊತೆಗೆ ಅನಧಿಕೃತ ಫ್ಲೆಕ್ಸ್, ಹೋರ್ಡಿಂಗ್‌ಗಳ ಕಾಟವೂ ಇದೆ. ಇವು ನಗರಗಳ ಸೌಂದರ್ಯವನ್ನು ಊನಗೊಳಿಸುವಲ್ಲಿ ಕುಖ್ಯಾತವಾಗಿವೆ.

ಬೆಂಗಳೂರಿನಲ್ಲೂ ಇಂಥ ಜಾಹೀರಾತು ಫಲಕಗಳ ಹಾವಳಿ ಸಾಕಷ್ಟಿದೆ. ಇವುಗಳಲ್ಲಿ ಅನಧಿಕೃತ ಎಷ್ಟು, ಅನಧಿಕೃತ ಎಷ್ಟು ಯಾರೂ ಹೇಳಲಾರರು. ಕಳೆದ ವರ್ಷ ಹೈಕೋರ್ಟ್, ಅನಧಿಕೃತ ಫ್ಲೆಕ್ಸ್, ಬ್ಯಾನರ್, ಹೋರ್ಡಿಂಗ್‌ಗಳ ಬಗ್ಗೆ ಬಿಬಿಎಂಪಿಯನ್ನು ತರಾಟೆಗೆ ತೆಗೆದುಕೊಂಡಿತ್ತು. ಪರಿಣಾಮ ನಗರವನ್ನು ತರಾತುರಿಯಿಂದ ಕ್ಲೀನ್ ಮಾಡಲಾಗಿತ್ತು. ಇದೀಗ ಬಿಬಿಎಂಪಿ ನೂತನ ಬೈಲಾ ತಂದಿದೆ. ಅದರಂತೆ ದೊಡ್ಡ ಹೋರ್ಡಿಂಗ್‌ಗಳಿಗೆ ಅವಕಾಶ ಕಲ್ಪಿಸಲಾಗುತ್ತಿದೆ. ಹೋರ್ಡಿಂಗ್‌ನ ಗಾತ್ರವು ರಸ್ತೆಯ ಅಗಲ, ವೃತ್ತ ಅಥವಾ ಜಂಕ್ಷನ್ ಮತ್ತು ಪ್ರದೇಶವನ್ನು ಅವಲಂಬಿಸಿರುತ್ತದೆ. ಉದಾಹರಣೆಗೆ, 80 ರಿಂದ 100 ಅಡಿ ಅಗಲದ ರಸ್ತೆಯಲ್ಲಿ (ಒಳಗಿನ ವರ್ತುಲ ರಸ್ತೆ) 1,000 ಚದರ ಅಡಿ ಹೋರ್ಡಿಂಗ್ ಅನ್ನು ಪ್ರದರ್ಶಿಸಲು ಅನುಮತಿಸಲಾಗಿದೆ. ಜಾಹೀರಾತುದಾರರು ಪ್ರತಿ 100 ಮೀಟರ್‌ಗಳಿಗೆ ಅಂತಹ ಬೋರ್ಡ್‌ಗಳನ್ನು ಸ್ಥಾಪಿಸಬಹುದು. ಕನಿಷ್ಠ ಜಾಹೀರಾತು ಪ್ರದೇಶವು 800 ಚದರ ಅಡಿಗಳಾಗಿದ್ದರೆ, ಗರಿಷ್ಠ 3,000 ಚದರ ಅಡಿ. ಗರಿಷ್ಠ ಎತ್ತರ 75 ಅಡಿಗಳವರೆಗೂ ಹೋಗಬಹುದು. ಅಂದರೆ ಸುಮಾರು ಏಳು ಮಹಡಿ ಎತ್ತರ!

ಇಂಥ ಒಂದು ಬೃಹತ್ ಫಲಕ ಗಾಳಿಗೆ ಬಿದ್ದರೆ ಎಂಥ ಅನಾಹುತ ಆದೀತು ಎಂಬುದನ್ನು ಊಹಿಸಬಹುದು. ನೂತನ ಹೋರ್ಡಿಂಗ್ ನೀತಿಯಿಂದ ವಾರ್ಷಿಕ 500 ಕೋಟಿ ರೂಪಾಯಿ ಗಳಿಸುವ ಇರಾದೆ ಬಿಬಿಎಂಪಿಗೆ ಇದೆ. ಆದರೆ ಅದರಡಿ ಓಡಾಡುವ ಜನರ ಸುರಕ್ಷತೆಯ ಬಗ್ಗೆ ಯಾವ ಕ್ರಮ ತೆಗೆದುಕೊಳ್ಳಲಾಗುತ್ತದೆ? ಇಂಥ ಅಪಘಾತದ ಸಂತ್ರಸ್ತರಿಗೆ ಗರಿಷ್ಠ ವಿಮೆ ನೀಡುವ ಕಾಯಿದೆ ಇರಬೇಕಲ್ಲವೆ? ಇದರ ಬಗ್ಗೆ ಯಾವುದೇ ಸ್ಪಷ್ಟತೆ ಇಲ್ಲ. ಇಂಥ ಅಪಘಾತಗಳು ಸಂಭವಿಸಿದಾಗ, ನಮ್ಮ ಸುತ್ತಮುತ್ತಲೂ ಯಾವಾಗ ಬೇಕಾದರೂ ಸಂಭವನೀಯ ಅಪಾಯಗಳ ಕುರಿತು ಕೂಡ ನಾವು ಚಿಂತಿಸಿ ಕಾರ್ಯಪ್ರವೃತ್ತರಾಗಬೇಕಿದೆ.

ಇದನ್ನೂ ಓದಿ: ICC World Cup 2023 : ಜಸ್ಟ್​ ಮಿಸ್​; ಪ್ರೇಕ್ಷಕರ ಸೀಟ್​​ಗಳ ಮೇಲೆ ಬಿದ್ದ ಬೃಹತ್​ ಹೋರ್ಡಿಂಗ್​

Continue Reading
Advertisement
Prajwal Revanna Case Lawyer Devarajegowda sent to judicial custody End of police custody
ಕ್ರೈಂ9 mins ago

Prajwal Revanna Case: ವಕೀಲ ದೇವರಾಜೇಗೌಡರಿಗೆ ನ್ಯಾಯಾಂಗ ಬಂಧನ; ಪೊಲೀಸ್‌ ಕಸ್ಟಡಿ ಅಂತ್ಯ

RCB vs CSK
ಕ್ರೀಡೆ23 mins ago

RCB vs CSK: ನಾಳಿನ ಪಂದ್ಯಕ್ಕೆ ಮಳೆ ಬಾರದಂತೆ ಕೃಷ್ಣ ನಾಮ ಜಪಿಸಿದ ಆರ್​ಸಿಬಿ ಆಟಗಾರರು; ವಿಡಿಯೊ ವೈರಲ್​

Kannada New Movie The judgement Trailer Out Kannada
ಸ್ಯಾಂಡಲ್ ವುಡ್25 mins ago

Kannada New Movie: ಕುತೂಹಲ ಮೂಡಿಸಿದೆ ರವಿಚಂದ್ರನ್ ಅಭಿನಯದ ‘ದ ಜಡ್ಜ್ ಮೆಂಟ್’ ಟ್ರೈಲರ್‌!

Crime News
ದೇಶ27 mins ago

ಶಾಲೆ ಸಮೀಪದ ಚರಂಡಿಯಲ್ಲಿ 4 ವರ್ಷದ ಮಗುವಿನ ಮೃತದೇಹ ಪತ್ತೆ; ಭುಗಿಲೆದ್ದ ಹಿಂಸಾಚಾರ

Bal Jeevan Bima
ಮನಿ ಗೈಡ್43 mins ago

Bal Jeevan Bima: ಮಕ್ಕಳ ಹೆಸರಲ್ಲಿ ನಿತ್ಯ 6 ರೂ.ನಂತೆ ಕಟ್ಟಿದರೆ 1 ಲಕ್ಷ ರೂ. ವಿಮೆಯ ರಕ್ಷಣೆ

road Accident in Bengaluru mysore
ಬೆಂಗಳೂರು44 mins ago

Road Accident : ಮೈಸೂರು- ಬೆಂಗಳೂರಲ್ಲಿ ಮೂವರ ಪ್ರಾಣ ಕಸಿದ ಮೂರು ಪ್ರತ್ಯೇಕ ಅಪಘಾತ

Swati Maliwal
ದೇಶ44 mins ago

Swati Maliwal: “ಪೀರಿಯೆಡ್ಸ್‌ ಆಗಿದೆ.. ಪ್ಲೀಸ್‌ ಬಿಟ್ಟು ಬಿಡು ಅಂದ್ರೂ ಕೇಳಲಿಲ್ಲ”-ಆಘಾತಕಾರಿ ಸಂಗತಿ ಬಿಚ್ಚಿಟ್ಟ ಸ್ವಾತಿ ಮಲಿವಾಲ್‌

Viral Video
ವೈರಲ್ ನ್ಯೂಸ್59 mins ago

Viral Video: ಅಳುತ್ತಾ ವಿದಾಯ ಹೇಳಿದ್ದೇಕೆ ಪಾಕಿಸ್ತಾನದ ಅತ್ಯಂತ ಕಿರಿಯ ಯೂಟ್ಯೂಬರ್?

1 year of CM Siddaramaiah government BJP prepares chargesheet and Congress gears up for counter
ರಾಜಕೀಯ1 hour ago

CM Siddaramaiah: ಸಿದ್ದರಾಮಯ್ಯ ಸರ್ಕಾರಕ್ಕೆ 1 ವರ್ಷ; ಚಾರ್ಜ್‌ಶೀಟ್‌ ರೆಡಿ ಮಾಡಿದ ಬಿಜೆಪಿ; ಕೌಂಟರ್‌ಗೆ ಕಾಂಗ್ರೆಸ್‌ ತಯಾರಿ

RCB vs CSK
ಕ್ರೀಡೆ1 hour ago

RCB vs CSK: ಆರ್​ಸಿಬಿ-ಚೆನ್ನೈ ಪಂದ್ಯಕ್ಕೆ ಮಳೆ ನಿಯಮ ಹೇಗಿದೆ?

Sharmitha Gowda in bikini
ಕಿರುತೆರೆ7 months ago

Geetha Serial Kannada: ನಿದ್ದೆ ಕದ್ದ ಚೋರಿ! ನಟಿ `ಭಾನುಮತಿ’ ಹಾಟ್‌ ಪೋಟೊಗಳಿಗೆ ಫ್ಯಾನ್ಸ್ ಫುಲ್ ಫಿದಾ

Kannada Serials
ಕಿರುತೆರೆ7 months ago

Kannada Serials TRP: 2ನೇ ಸ್ಥಾನದಲ್ಲಿ 2 ಧಾರಾವಾಹಿಗಳು; ಟಿಆರ್‌ಪಿ ರೇಸ್‌ನಲ್ಲಿಲ್ಲ ಭಾಗ್ಯಲಕ್ಷ್ಮೀ!

Bigg Boss- Saregamapa 20 average TRP
ಕಿರುತೆರೆ7 months ago

Kannada Serials TRP: ಏಳನೇ ಸ್ಥಾನಕ್ಕೆ ʻಅಮೃತಧಾರೆʼ ಕುಸಿತ; ಬಿಗ್‌ ಬಾಸ್‌-ಸರಿಗಮಪ ಟಿಆರ್‌ಪಿ ಎಷ್ಟು?

galipata neetu
ಕಿರುತೆರೆ6 months ago

Kanyadana Serial: ಕಿರುತೆರೆಗೆ ಮತ್ತೆ ಎಂಟ್ರಿ ಕೊಟ್ಟ ʻಗಾಳಿಪಟʼ ಖ್ಯಾತಿಯ ʻನೀತುʼ!

Kannada Serials
ಕಿರುತೆರೆ8 months ago

Kannada Serials TRP: ನಾಲ್ಕನೇ ಸ್ಥಾನಕ್ಕೆ ಕುಸಿತ ಕಂಡ ʻಸೀತಾ ರಾಮʼ; ಟಿಆರ್‌ಪಿ ರೇಸ್‌ಗೆ ʻಭಾಗ್ಯಲಕ್ಷ್ಮಿʼ ಬ್ಯಾಕ್‌!

Kannada Serials
ಕಿರುತೆರೆ7 months ago

Kannada Serials TRP: ಟಿಆರ್‌ಪಿಯಲ್ಲಿ ʻಭಾಗ್ಯಲಕ್ಷ್ಮೀʼ ಹವಾ; ʻಪುಟ್ಟಕ್ಕನ ಮಕ್ಕಳುʼ ಧಾರಾವಾಹಿಗೆ ಸಂಕಷ್ಟ!

Bigg Boss' dominates TRP; Sita Rama fell to the sixth position
ಕಿರುತೆರೆ7 months ago

Kannada Serials TRP: ಟಿಆರ್‌ಪಿಯಲ್ಲಿ ʻಬಿಗ್ ಬಾಸ್ʼದೇ ಮೇಲುಗೈ; 6ನೇ ಸ್ಥಾನಕ್ಕೆ ಕುಸಿದ ʻಸೀತಾ ರಾಮʼ

geetha serial Dhanush gowda engagement
ಕಿರುತೆರೆ5 months ago

Dhanush Gowda: ಗೀತಾ ಧಾರಾವಾಹಿ ನಟನ ನಿಶ್ಚಿತಾರ್ಥ; ಭವ್ಯಾಳ ಕಮೆಂಟ್‌ ಬಾಕ್ಸ್‌ ಆಫ್‌!

varun
ಕಿರುತೆರೆ6 months ago

Brindavana Serial: ʼಬೃಂದಾವನʼ ಧಾರಾವಾಹಿಯಲ್ಲಿ ದೊಡ್ಡ ಟ್ವಿಸ್ಟ್‌; ಪ್ರಮುಖ ಪಾತ್ರಧಾರಿಯೇ ಬದಲು

Kannada Serials
ಕಿರುತೆರೆ8 months ago

Kannada Serials TRP: ಟಿಆರ್‌ಪಿಯಲ್ಲಿ ಏರಿಕೆ ಕಂಡ ʻಅಮೃತಧಾರೆʼ; ʻಗಟ್ಟಿಮೇಳʼಕ್ಕೆ ನಾಲ್ಕನೇ ಸ್ಥಾನ!

Karnataka weather Forecast
ಮಳೆ8 hours ago

Karnataka Weather : ಮೈಸೂರು, ಮಂಡ್ಯ ಸೇರಿ ಈ 7 ಜಿಲ್ಲೆಗಳಲ್ಲಿ ವ್ಯಾಪಕ ಮಳೆ ಸಂಭವ

Dina Bhavishya
ಭವಿಷ್ಯ9 hours ago

Dina Bhavishya : ಈ ರಾಶಿಯ ಪ್ರೇಮಿಗಳಿಗೆ ಮನೆಯಿಂದ ಸಿಗುತ್ತೆ ಗ್ರೀನ್‌ ಸಿಗ್ನಲ್‌

Karnataka Weather Forecast
ಮಳೆ22 hours ago

Karnataka Weather : ಭಾರಿ ಮಳೆಗೆ ಕೊಟ್ಟೂರು ಬಸ್ ಸ್ಟ್ಯಾಂಡ್‌ ಜಲಾವೃತ; ‌ ತಾಯಿ-ಮಗ ಗ್ರೇಟ್‌ ಎಸ್ಕೇಪ್‌

Drowned in water
ಹಾಸನ1 day ago

Drowned in water : ಕೆರೆಯಲ್ಲಿ ಈಜಲು ಹೋದ ನಾಲ್ವರು ನೀರುಪಾಲು; ಓರ್ವ ಬಾಲಕ ಪಾರು

Suspicious Case
ಬೆಂಗಳೂರು1 day ago

Suspicious Case : ಬಾತ್‌ ರೂಂನಲ್ಲಿತ್ತು ಕಾಲೇಜು ಹುಡುಗಿ ಡೆಡ್‌ ಬಾಡಿ; ಕುತ್ತಿಗೆ ಕೊಯ್ದು ಸಾಯಿಸಿದವರು ಯಾರು?

Prajwal Revanna Case
ಕರ್ನಾಟಕ2 days ago

Prajwal Revanna Case: ಪ್ರಜ್ವಲ್‌ ರೇವಣ್ಣ ಇಂದೇ ಜರ್ಮನಿಯಿಂದ ಭಾರತಕ್ಕೆ? ಎಸ್‌ಐಟಿ ಅಲರ್ಟ್‌

Dina Bhavishya
ಭವಿಷ್ಯ2 days ago

Dina Bhavishya : ಭೂ ವ್ಯವಹಾರಕ್ಕೆ ಇದು ಸೂಕ್ತ ಸಮಯ; ವ್ಯಾಪಾರದಲ್ಲಿ ಡಬಲ್‌ ಲಾಭ

HD Revanna Released first reaction after release will be acquitted of all charges
ರಾಜಕೀಯ3 days ago

HD Revanna Released: ರಿಲೀಸ್‌ ಬಳಿಕ ರೇವಣ್ಣ ಫಸ್ಟ್‌ ರಿಯಾಕ್ಷನ್;‌ ನ್ಯಾಯಾಂಗದ ಮೇಲೆ ನಂಬಿಕೆ ಇದೆ; ಆರೋಪ ಮುಕ್ತನಾಗುವೆ

CM Siddaramaiah says Our government is stable for 5 years BJP will disintegrate
Lok Sabha Election 20243 days ago

CM Siddaramaiah: ನಮ್ಮ ಸರ್ಕಾರ 5 ವರ್ಷ ಸುಭದ್ರ; ಚುನಾವಣೆ ಬಳಿಕ ಬಿಜೆಪಿ ಛಿದ್ರ ಎಂದ ಸಿಎಂ ಸಿದ್ದರಾಮಯ್ಯ!

I dont want to go to other states for Lok Sabha Election 2024 campaign for Congress says CM Siddaramaiah
Lok Sabha Election 20243 days ago

CM Siddaramaiah: ಕಾಂಗ್ರೆಸ್‌ ಪರ ಬೇರೆ ರಾಜ್ಯಗಳಿಗೆ ಪ್ರಚಾರಕ್ಕೆ ಹೋಗಲು ನನಗೆ ಇಷ್ಟವಿಲ್ಲ: ಸಿಎಂ ಸಿದ್ದರಾಮಯ್ಯ!

ಟ್ರೆಂಡಿಂಗ್‌