Air Pollution | ದೇಶದ ಮಾಲಿನ್ಯಯುಕ್ತ ನಗರಗಳ ಪೈಕಿ ಬೆಂಗಳೂರಿಗೆ ಆರನೇ ಸ್ಥಾನ! - Vistara News

ಪರಿಸರ

Air Pollution | ದೇಶದ ಮಾಲಿನ್ಯಯುಕ್ತ ನಗರಗಳ ಪೈಕಿ ಬೆಂಗಳೂರಿಗೆ ಆರನೇ ಸ್ಥಾನ!

ಕೊರೊನಾ ನಂತರ ನಗರದಲ್ಲಿ ಸಂಚಾರ ದಟ್ಟಣೆ ಮತ್ತೆ ಹೆಚ್ಚಿದ್ದು, ವಾಯು ಮಾಲಿನ್ಯವೂ (Air Pollution) ಹೆಚ್ಚಾಗುತ್ತಿದೆ. ದೇಶದ ಅತಿ ಹೆಚ್ಚು ವಾಯು ಮಾಲಿನ್ಯ ಹೊಂದಿರುವ ನಗರಗಳ ಪಟ್ಟಿಯಲ್ಲಿ ಉದ್ಯಾನ ನಗರಿಯೂ ಕಾಣಿಸಿಕೊಂಡಿದೆ.

VISTARANEWS.COM


on

Air Pollution
ಮಹತ್ವದ, ಕುತೂಹಲಕರ ಸುದ್ದಿಗಾಗಿ ಫಾಲೊ ಮಾಡಿ
Koo

ಬೆಂಗಳೂರು: ಉದ್ಯಾನ ನಗರಿ ಬೆಂಗಳೂರು ಈಗ ಮಾಲಿನ್ಯ ನಗರಿಯಾಗುತ್ತಿದೆ. ಕೊರೊನಾ ನಂತರ ಮತ್ತೆ ನಗರದಲ್ಲಿ ಸಂಚಾರ ದಟ್ಟಣೆ ಹೆಚ್ಚಾಗಿದ್ದು, ದೇಶದ ಅತಿ ಹೆಚ್ಚಿನ ಮಾಲಿನ್ಯಯುಕ್ತ ನಗರಗಳಲ್ಲಿ ಅಗ್ರಸ್ಥಾನ ಪಡೆಯುವತ್ತ ಹೆಜ್ಜೆ ಇಟ್ಟಿದೆ. ಇದಕ್ಕೆ ಸಾಕ್ಷಿಯೆಂಬಂತೆ ಸೋಮವಾರ ಬೆಳಗ್ಗೆ ನಗರದಲ್ಲಿ ವಾಯು ಮಾಲಿನ್ಯವು (Air Pollution) ಅತೀ ಹೆಚ್ಚಾಗಿರುವುದನ್ನು ಕೇಂದ್ರ ಮಾಲಿನ್ಯ ನಿಯಂತ್ರಣ ಮಂಡಳಿಯ ವರದಿಯು ಬೊಟ್ಟು ಮಾಡಿದೆ.

ಸೋಮವಾರ ಬೆಳಗ್ಗೆ ೭.೩೦ರ ವೇಳೆಯಲ್ಲಿ ಬೆಂಗಳೂರಿನ ವಾಯು ಮಾಲಿನ್ಯವು ವಾಯು ಗುಣಮಟ್ಟ ಇಂಡೆಕ್ಸ್‌ನಲ್ಲಿ (air quality index (AQI)) ನಲ್ಲಿ 101 ಎಂದು ದಾಖಲಾಗಿತ್ತು. ಇದರಿಂದಾಗಿ ಸಿಲಿಕಾನ್‌ ಸಿಟಿಯು ದೇಶದಲ್ಲಿ ವಾಯುಮಾಲಿನ್ಯಕ್ಕೆ ಹೆಸರಾದ ಆರು ನಗರಗಳ ಪೈಕಿ ಒಂದಾಗಿ ಗುರುತಿಸಿಕೊಂಡಿತು.

ಈ ಪಟ್ಟಿಯಲ್ಲಿ ಪಂಚಾಬ್‌ನ ರುಪ್ನಾಗರ್‌ 141 ಎಕ್ಯೂಐ ನೊಂದಿಗೆ ಮೊದಲ ಸ್ಥಾನ ಪಡೆದಿದ್ದರೆ, ಪಟನಾ, ಧಾರುಹೆರಾ, ದೆಹಲಿ, ಚಂದ್ರಾಪುರ ನಗರಗಳು ಕ್ರಮವಾಗಿ 113,114,106 ಮತ್ತು 104 ಎಕ್ಯೂಐನೊಂದಿಗೆ ಮೊದಲ ಐದು ಸ್ಥಾನ ಪಡೆದಿದ್ದವು. ಬೆಂಗಳೂರು ಆರನೇ ಸ್ಥಾನ ಪಡೆದುಕೊಂಡಿತು.

ಬಿಟಿಎಂ ಲೇಔಟ್ ಅತಿ ಮಾಲಿನ್ಯಯುಕ್ತ ಪ್ರದೇಶ

ನಗರದ ಬಿಟಿಎಂ ಲೇಔಟ್‌ ನಗರದಲ್ಲಿ ಅತೀ ಹೆಚ್ಚಿನ ವಾಯು ಮಾಲಿನ್ಯವನ್ನು ಹೊಂದಿರುವ ಪ್ರದೇಶವಾಗಿದೆ. ಈ ಪ್ರದೇಶವು ೧೦೧ ಎಕ್ಯೂಐ ಹೊಂದಿತ್ತು ಎಂದು ವರದಿ ಹೇಳಿದೆ. ನಗರದಲ್ಲಿ ವಾಯು ಮಾಲಿನ್ಯ ಹೆಚ್ಚಲು ಸಾರಿಗೆ ವ್ಯವಸ್ಥೆ, ಸಿಟಿಯ ಟ್ರಾಫಿಕ್ ಜಾಮ್, ಟ್ರಾಫಿಕ್ ಸಿಗ್ನಲ್, ರಸ್ತೆ ಕಾಮಗಾರಿ ವಿಳಂಬ ಕಾರಣವಾಗಿದೆ ಎಂದು ಹೇಳಲಾಗುತ್ತಿದೆ.

Air Pollution

ಬೆಂಗಳೂರಿನಲ್ಲಿ ಯಾವುದರಿಂದ ಎಷ್ಟು ಮಾಲಿನ್ಯ?
ಸಾರಿಗೆ       63.5%
ರೋಡ್ ಡಸ್ಟ್   6.8%
ವೇಸ್ಟ್ ಬರ್ನಿಂಗ್    9.6%
ಹೋಟೆಲ್     3.7%
ಇಂಡಸ್ಟ್ರಿ             0.1%

ಸಮಾಧಾನದ ವಿಷಯವೆಂದರೆ ಸೋಮವಾರ ಬೆಳಗ್ಗೆ ಅತಿ ಹೆಚ್ಚಿನ ಮಾಲಿನ್ಯದಿಂದ ಗಮನ ಸೆಳೆದಿದ್ದ ನಗರವು ಮಧ್ಯಾಹ್ನದ ವೇಳೆಗೆ ನಿಯಂತ್ರಣಕ್ಕೆ ಬಂದಿತ್ತು ಮಧ್ಯಾಹ್ನ ೧ ಗಂಟೆಯ ವೇಳೆಗೆ ನಗರದಲ್ಲಿನ ಮಾಲಿನ್ಯದ ಪ್ರಮಾಣವು ೬೭ಐಕ್ಯೂಐಗೆ ಇಳಿದಿತ್ತು ಎಂದು ಕೇಂದ್ರ ಪರಿಸರ ಮಾಲಿನ್ಯ ನಿಯಂತ್ರಣ ಮಂಡಳಿಯು ತಿಳಿಸಿದೆ. ಮಂಡಳಿಯ ಪ್ರಕಾರ ಎಕ್ಯೂಐ ೧೦೦ ಇದ್ದರೂ ಪರ್ವಾಗಿಲ್ಲ. ಆದರೆ ಅದನ್ನು ಮೀರಿ ಹೋದಾಗ ಅತಿ ಹೆಚ್ಚಿನ ಮಾಲಿನ್ಯಯುಕ್ತ ನಗರವೆಂದು ಪರಿಗಣಿಸಲಾಗುತ್ತದೆ.

ರಾಜ್ಯ ಮಾಲಿನ್ಯ ನಿಯಂತ್ರಣ ಮಂಡಳಿಯಿಂದಲೂ ವರದಿ

ಬೆಂಗಳೂರಿನಲ್ಲಿ ವಾಯು ಮಾಲಿನ್ಯ ಹೆಚ್ಚಾಗಿರುವ ಕುರಿತು ರಾಜ್ಯ ಮಾಲಿನ್ಯ ನಿಯಂತ್ರಣ ಮಂಡಳಿಯೂ ಇತ್ತೀಚೆಗೆ ವರದಿ ನೀಡಿದೆ. ಈ ಕುರಿತು ಮಂಡಳಿ ಅಧ್ಯಯನ ನಡೆಸಿದ್ದು, ವರದಿಯ ಪ್ರಕಾರ ನಗರದ ಮಾಲಿನ್ಯಕ್ಕೆ ಸಾರಿಗೆ ವ್ಯವಸ್ಥೆಯೇ ಮೂಲ ಕಾರಣ.

ನಗರದ ಶೇ 63.5% ರಷ್ಟು ಮಾಲಿನ್ಯ ಬಿಎಂಟಿಸಿಯ ವಾಹನಗಳಿಂದ ಸೃಷ್ಟಿಯಾಗುತ್ತಿದೆ ಎಂದು ಅಧ್ಯಯನ ವರಿದ ಬೊಟ್ಟು ಮಾಡಿದೆ. ರಸ್ತೆ ಕಾಮಗಾರಿಯಿಂದ ರೋಡ್ ಡಸ್ಟ್, ಇಂಡಸ್ಟ್ರೀಸ್, ಹೋಟೆಲ್‌ಳಿಂದಲೂ ಮಾಲಿನ್ಯ ಹೆಚ್ಚಳವಾಗಿದೆ. ಟ್ರಾಫಿಕ್ ಸಿಗ್ನಲ್‌ನಿಂದ ಅಧಿಕ ವಾಯು ಮಾಲಿನ್ಯ ಸೃಷ್ಟಿಯೆಂದು ವರದಯಲ್ಲಿ ಉಲ್ಲೇಖಿಸಲಾಗಿದೆ. ಹೀಗಾಗಿ ಸಾರಿಗೆ ಇಲಾಖೆ ಜತೆ ಚರ್ಚಿಸಿ ಹೆಚ್ಚೆಚ್ಚು ಎಲೆಕ್ಟ್ರಿಕಲ್ ಬಸ್ ಸೇವೆಗೆ ಬಳಸುವಂತೆ ವರದಿಯಲ್ಲಿ ಸಲಹೆ ನೀಡಲಾಗಿದೆ.

ಇದನ್ನೂ ಓದಿ| ವಾಯು ಮಾಲಿನ್ಯ ಎಂಬ ಸೈಲೆಂಟ್‌ ಕಿಲ್ಲರ್ ವರ್ಷಕ್ಕೆ 23 ಲಕ್ಷ ಭಾರತೀಯರು ಬಲಿ

ಕ್ಷಣ ಕ್ಷಣದ ಮಾಹಿತಿಗಾಗಿ Vistara News FaceBook ಪೇಜ್ ಫಾಲೋ ಮಾಡಿ
ಮಹತ್ವದ ಮಾಹಿತಿಗಾಗಿ ವಿಸ್ತಾರ ನ್ಯೂಸ್ ಆ್ಯಪ್ ಉಚಿತವಾಗಿ ಡೌನ್ ಲೋಡ್ ಮಾಡಿಕೊಳ್ಳಿ: Andriod App | IOS App

ದಾವಣಗೆರೆ

Davanagere News: ತರಗನಹಳ್ಳಿಯ ಚನ್ನಮ್ಮ ವಸತಿ ಶಾಲೆಯಲ್ಲಿ ಪರಿಸರ ದಿನಾಚರಣೆ

Davanagere News: ಹೊನ್ನಾಳಿ ತಾಲೂಕಿನ ತರಗನಹಳ್ಳಿ ಸಮೀಪದ ಕಿತ್ತೂರು ರಾಣಿ ಚನ್ನಮ್ಮ ವಸತಿ ಶಾಲೆಯಲ್ಲಿ ವಿಶ್ವ ಪರಿಸರ ದಿನಾಚರಣೆ ಅಂಗವಾಗಿ ಸಸಿ ನೆಡುವ ಕಾರ್ಯಕ್ರಮ ಜರುಗಿತು.

VISTARANEWS.COM


on

World Environment Day Celebration at Kittur Rani Chennamma Residential School
Koo

ಹೊನ್ನಾಳಿ: ತಾಲೂಕಿನ ತರಗನಹಳ್ಳಿ ಸಮೀಪದ ಕಿತ್ತೂರು ರಾಣಿ ಚನ್ನಮ್ಮ ವಸತಿ ಶಾಲೆಯಲ್ಲಿ ವಿಶ್ವ ಪರಿಸರ ದಿನಾಚರಣೆ ಅಂಗವಾಗಿ ಸಸಿ ನೆಡುವ ಕಾರ್ಯಕ್ರಮವನ್ನು (Davanagere News) ಹಮ್ಮಿಕೊಳ್ಳಲಾಗಿತ್ತು.

ಇದನ್ನೂ ಓದಿ: Karnataka Weather : ಉತ್ತರ ಒಳನಾಡು, ಕರಾವಳಿಯಲ್ಲಿ ವ್ಯಾಪಕ ಮಳೆ; ಶಾಲೆಗೆ ನುಗ್ಗಿದ ನೀರು, ಮಕ್ಕಳಿಗೆ ರಜೆ

ತರಗನಹಳ್ಳಿ ಗ್ರಾಮ ಪಂಚಾಯಿತಿ ಅಧ್ಯಕ್ಷ ರಮೇಶ್ ಗೌಡ, ಗಿಡ ನೆಡುವುದರ ಮೂಲಕ ಕಾರ್ಯಕ್ರಮಕ್ಕೆ ಚಾಲನೆ ನೀಡಿದರು. ಬಳಿಕ ಮಾತನಾಡಿದ ಅವರು, ಪರಿಸರ ಸಂರಕ್ಷಣೆಯು ಪ್ರತಿಯೊಬ್ಬ ನಾಗರೀಕನ ಆದ್ಯ ಕರ್ತವ್ಯವಾಗಿದೆ. ಪರಿಸರವು ಸಕಲ ಜೀವರಾಶಿಗಳಿಗೂ ಆಶ್ರಯ ನೀಡಿದೆ. ಎಲ್ಲರೂ ಪರಿಸರ ಉಳಿಸಿ, ಬೆಳೆಸೋಣ ಎಂದು ಶಾಲೆಯ ವಿದ್ಯಾರ್ಥಿಗಳಿಗೆ ತಿಳಿಸಿದರು.

ಪರಿಸರದ ಬಗ್ಗೆ ಮಕ್ಕಳಿಗೆ ಬಾಲ್ಯದಲ್ಲಿಯೇ ಕಾಳಜಿ ಮೂಡಿಸಬೇಕು ಎಂದ ಅವರು, ಗಿಡಗಳನ್ನು ನೆಡುವುದರ ಜತೆಗೆ ಅದನ್ನು ಉಳಿಸಿ, ಬೆಳೆಸುವ ಕಾರ್ಯವನ್ನು ಮಾಡಬೇಕು ಎಂದು ತಿಳಿಸಿದರು. ಇದೇ ವೇಳೆ ಶಾಲಾ ಶಿಕ್ಷಕರು ಹಾಗೂ ವಿದ್ಯಾರ್ಥಿಗಳಿಂದ ಶಾಲಾ ಆವರಣದಲ್ಲಿ ಗಿಡಗಳನ್ನು ನೆಡಲಾಯಿತು.

ಇದನ್ನೂ ಓದಿ: Toyota Kirloskar Motor: ದೆಹಲಿಯಲ್ಲಿ ಟಿಕೆಎಂನ ʼಟೊಯೊಟಾ ಯೂಸ್ಡ್ ಕಾರ್ʼ ಮಳಿಗೆಗೆ ಚಾಲನೆ

ಈ ಸಂದರ್ಭದಲ್ಲಿ ಕಿತ್ತೂರು ರಾಣಿ ಚನ್ನಮ್ಮ ವಸತಿ ಶಾಲೆಯ ಮುಖ್ಯ ಶಿಕ್ಷಕ ಶಿವಕುಮಾರ್ ಕೆ.ಆರ್. ಹಾಗೂ ವಸತಿ ಶಾಲೆಯ ಶಿಕ್ಷಕರು ಹಾಗೂ ವಿದ್ಯಾರ್ಥಿಗಳು ಉಪಸ್ಥಿತರಿದ್ದರು.

Continue Reading

ಶಿವಮೊಗ್ಗ

World Environment Day: ಚಂದ್ರಗುತ್ತಿಯ ಪ್ರಾಥಮಿಕ ಶಾಲೆಯಲ್ಲಿ ಪರಿಸರ ದಿನಾಚರಣೆ

World Environment Day: ಸೊರಬ ತಾಲೂಕಿನ ಚಂದ್ರಗುತ್ತಿ ಸಮೀಪದ ಕಮರೂರು ಸರ್ಕಾರಿ ಹಿರಿಯ ಪ್ರಾಥಮಿಕ ಶಾಲೆಯಲ್ಲಿ ವಿಶ್ವ ಪರಿಸರ ದಿನಾಚರಣೆ ಅಂಗವಾಗಿ ಸಸಿ ನೆಡುವ ಕಾರ್ಯಕ್ರಮ ಜರುಗಿತು.

VISTARANEWS.COM


on

World Environment Day Celebration at Kamaruru Government higher Primary School
Koo

ಸೊರಬ: ನಿಸರ್ಗದತ್ತವಾದ ಪರಿಸರ (World Environment Day) ಸಂರಕ್ಷಣೆ ಮಾಡುವ ಜವಾಬ್ದಾರಿ ನಮ್ಮೆಲ್ಲರ ಮೇಲಿದೆ ಎಂದು ಕಮರೂರು ಸರ್ಕಾರಿ ಹಿರಿಯ ಪ್ರಾಥಮಿಕ ಶಾಲೆಯ ಮುಖ್ಯ ಶಿಕ್ಷಕ ಎಸ್. ವಾಸುದೇವ್ ಹೇಳಿದರು.

ತಾಲೂಕಿನ ಚಂದ್ರಗುತ್ತಿ ಸಮೀಪದ ಕಮರೂರು ಸರ್ಕಾರಿ ಹಿರಿಯ ಪ್ರಾಥಮಿಕ ಶಾಲೆಯಲ್ಲಿ ವಿಶ್ವ ಪರಿಸರ ದಿನಾಚರಣೆ ಅಂಗವಾಗಿ ಗಿಡಗಳನ್ನು ನೆಡುವುದರ ಮೂಲಕ ಕಾರ್ಯಕ್ರಮಕ್ಕೆ ಚಾಲನೆ ನೀಡಿ ಅವರು ಮಾತನಾಡಿದರು.

ಇದನ್ನೂ ಓದಿ: Toyota Kirloskar Motor: ದೆಹಲಿಯಲ್ಲಿ ಟಿಕೆಎಂನ ʼಟೊಯೊಟಾ ಯೂಸ್ಡ್ ಕಾರ್ʼ ಮಳಿಗೆಗೆ ಚಾಲನೆ

ಗಿಡಗಳನ್ನು ನೆಡುವುದರ ಜತೆಯಲ್ಲಿ ಗಿಡಗಳನ್ನು ಪೋಷಣೆ ಮಾಡುವುದು ಸಹ ಮುಖ್ಯ. ನಮ್ಮ ಸುತ್ತಮುತ್ತಲಿನ ಪ್ರದೇಶಗಳಲ್ಲಿ ನೈಸರ್ಗಿಕ ಪರಿಸರದ ವಾತಾವರಣವಿದ್ದಲ್ಲಿ ಮತ್ತು ಮನುಷ್ಯ ಆರೋಗ್ಯಕರವಾಗಿರಬೇಕಾದರೆ ಪರಿಸರ ಉತ್ತಮವಾಗಿರಬೇಕು. ಮಕ್ಕಳಿಗೆ ಬಾಲ್ಯದಲ್ಲಿಯೇ ಪರಿಸರದ ಬಗ್ಗೆ ಕಾಳಜಿ ಮೂಡಿಸಬೇಕು. ಈ ನಿಟ್ಟಿನಲ್ಲಿ ಅರ್ಥಪೂರ್ಣವಾಗಿ ಸಸಿ ನೆಡುವ ಕಾರ್ಯಕ್ರಮ ನಡೆಸಲಾಗುತ್ತಿದೆ ಎಂದರು.

ಸಸಿಗಳನ್ನು ನೆಟ್ಟರೆ ಸಾಲದು ಪೋಷಣೆ ಅಗತ್ಯ ಈ ನಿಟ್ಟಿನಲ್ಲಿ ಕಳೆದ ವರ್ಷ ನೆಟ್ಟ ಗಿಡಗಳನ್ನು ಸಂರಕ್ಷಣೆ ಮಾಡುವಲ್ಲಿ ಶಾಲಾ ಶಿಕ್ಷಕ ವರ್ಗ ಹಾಗೂ ವಿದ್ಯಾರ್ಥಿಗಳ ಶ್ರಮ ಶ್ಲಾಘನೀಯವಾಗಿದೆ ಎಂದು ತಿಳಿಸಿದರು.

ಇದೇ ವೇಳೆ ಶಾಲಾ ಶಿಕ್ಷಕ ವರ್ಗದವರು ಹಾಗೂ ವಿದ್ಯಾರ್ಥಿಗಳಿಂದ ಹಲವು ಜಾತಿಯ ಗಿಡಗಳನ್ನು ಶಾಲಾ ಆವರಣದಲ್ಲಿ ನೆಡಲಾಯಿತು.

ಇದನ್ನೂ ಓದಿ: Food Tips Kannada: ಇನ್‌ಸ್ಟಂಟ್‌ ನೂಡಲ್ಸ್‌ ತಿಂದರೆ ಆರೋಗ್ಯಕ್ಕೆ ತೊಂದರೆ ಇದೆಯೆ?

ಈ ಸಂದರ್ಭದಲ್ಲಿ ಶಾಲೆಯ ಶಿಕ್ಷಕರಾದ ಗಣೇಶ್ ಪ್ರಸಾದ, ನಾಮದೇವ ನಾಯ್ಕ್, ಅಕ್ಷಯ್, ಶ್ರೀಕೃಷ್ಣ, ಆಶಾ, ಶಶಿಕಾಂತ್, ಕಾವ್ಯ ಮತ್ತು ವಿದ್ಯಾರ್ಥಿಗಳು ಉಪಸ್ಥಿತರಿದ್ದರು.

Continue Reading

ಬೆಂಗಳೂರು

World Environment Day: ಬೆಂಗಳೂರಿನಲ್ಲಿ ಎನ್‌ಸಿಸಿ ತಂಡದಿಂದ ವಿಶೇಷ ಪರಿಸರ ಜಾಗೃತಿ ಕಾರ್ಯಕ್ರಮ

World Environment Day: ವಿಶ್ವ ಪರಿಸರ ದಿನಾಚರಣೆಯ ಅಂಗವಾಗಿ ನಂ. 2 ಕರ್ನಾಟಕ ಏರ್ (ಟೆಕ್ನಿಕಲ್) ಸ್ಕ್ವಾಡ್ರನ್ ಎನ್‌ಸಿಸಿ ತಂಡದ ವತಿಯಿಂದ ಪರಿಸರ ಸಂರಕ್ಷಣೆ ಕುರಿತು ಸಾರ್ವಜನಿಕರಲ್ಲಿ ಜಾಗೃತಿ ಮೂಡಿಸಲು ಬೆಂಗಳೂರು ನಗರದ ವಿವಿಧ ಶಾಲೆಯ ವಿದ್ಯಾರ್ಥಿಗಳು ಹಾಗೂ ಎನ್‌ಸಿಸಿ ವಿದ್ಯಾರ್ಥಿಗಳಿಂದ ವಿಶೇಷ ಜಾಗೃತಿ ಕಾರ್ಯಕ್ರಮಗಳು ಜರುಗಿದವು.

VISTARANEWS.COM


on

Environment awareness programme by NCC team in Bengaluru
Koo

ಬೆಂಗಳೂರು: ವಿಶ್ವ ಪರಿಸರ ದಿನಾಚರಣೆಯ ಅಂಗವಾಗಿ ನಂ.2 ಕರ್ನಾಟಕ ಏರ್ (ಟೆಕ್ನಿಕಲ್) ಸ್ಕ್ವಾಡ್ರನ್ ಎನ್‌ಸಿಸಿ ತಂಡದ ವತಿಯಿಂದ ಪರಿಸರ ಸಂರಕ್ಷಣೆ (World Environment Day) ಕುರಿತು ಸಾರ್ವಜನಿಕರಲ್ಲಿ ಜಾಗೃತಿ ಮೂಡಿಸಲು ಬೆಂಗಳೂರು ನಗರದ ವಿವಿಧ ಶಾಲೆಯ ವಿದ್ಯಾರ್ಥಿಗಳು ಹಾಗೂ ಎನ್‌ಸಿಸಿ ವಿದ್ಯಾರ್ಥಿಗಳಿಂದ ವಿಶೇಷ ಜಾಗೃತಿ ಕಾರ್ಯಕ್ರಮಗಳನ್ನು ಹಮ್ಮಿಕೊಳ್ಳಲಾಗಿತ್ತು.

ಬೆಂಗಳೂರು ನಗರದ ಐ.ಟಿ.ಐ ಸೆಂಟ್ರಲ್ ಶಾಲೆಯ ವತಿಯಿಂದ ಇಲ್ಲಿನ ರಾಮಮೂರ್ತಿ ನಗರದ ಮುಖ್ಯರಸ್ತೆಯಲ್ಲಿ ಶಾಲೆಯ ನೂರಾರು ವಿದ್ಯಾರ್ಥಿಗಳು ಹಾಗೂ ಎನ್‌ಸಿಸಿ ವಿದ್ಯಾರ್ಥಿಗಳಿಂದ ಪರಿಸರ ಸಂರಕ್ಷಣೆ ಕುರಿತ ಭಿತ್ತಿಚಿತ್ರಗಳೊಂದಿಗೆ ನಡೆದ ಕಾಲ್ನಡಿಗೆ ಜಾಥಾ ನಡೆಸಿ, ಜಾಗೃತಿ ಮೂಡಿಸಲಾಯಿತು. ಬಳಿಕ ಸಸಿ ನೆಡುವ ಕಾರ್ಯಕ್ರಮ ಜರುಗಿತು. ಶಾಲಾ ವಿದ್ಯಾರ್ಥಿಗಳಿಂದ ನಡೆದ ಬೀದಿ ನಾಟಕ ಎಲ್ಲರ ಗಮನ ಸೆಳೆಯಿತು.

ಇದನ್ನೂ ಓದಿ: India vs Ireland: ಪಂಜಾಬಿ ಪುಟ್ಟ ಪೋರನಿಂದ ಚಿನ್ನದ ಪದಕ ಪಡೆದ ಮೊಹಮ್ಮದ್​ ಸಿರಾಜ್

ಸೈಕಲ್ ಜಾಥಾ

ನಗರದ ಜೈನ್ ಪಬ್ಲಿಕ್ ಶಾಲೆ ಹಾಗೂ ಎನ್‌ಸಿಸಿ ತಂಡದ ವತಿಯಿಂದ ಪರಿಸರದ ನಡೆ ಹಳ್ಳಿಯ ಕಡೆ ಎಂಬ ವಿಶೇಷ ಕಾರ್ಯಕ್ರಮವನ್ನು ಹಮ್ಮಿಕೊಳ್ಳಲಾಗಿತ್ತು. ಬಳಿಕ ಕ್ರೈಸ್ಟ್ ಹಾಗೂ ಸೀ ಪ್ರೌಢಶಾಲೆಯ ಎನ್‌ಸಿಸಿ ಕೆಡೆಟ್‌ಗಳಿಂದ ಸೈಕಲ್ ಜಾಥಾ ನಡೆಸಲಾಯಿತು.

ಇಲ್ಲಿನ ಐ.ಟಿ.ಐ. ವಿದ್ಯಾಮಂದಿರ ಪ್ರೌಢಶಾಲೆ, ಜೈನ್ ಪಬ್ಲಿಕ್ ಶಾಲೆ, ಕ್ರೈಸ್ಟ್, ಸೈಂಟ್ ಪ್ಯಾಟ್ರಿಕ್ಸ್ ಅಕಾಡೆಮಿ, ಸೀ ಪ್ರೌಢಶಾಲೆ, ಶ್ರೀವಾಣಿ ರಾಜಾಜಿನಗರ ಹಾಗೂ ಬಸವೇಶ್ವರ ನಗರ ಶಾಲೆಗಳ ವತಿಯಿಂದ ಪರಿಸರ ಜಾಗೃತಿ ಮೂಡಿಸುವ ಅನೇಕ ಕಾರ್ಯಗಳು ಜರುಗಿದವು.

ಈ ಸಂದರ್ಭದಲ್ಲಿ ನಂ. 2 ಕರ್ನಾಟಕ ಏರ್ (ಟೆಕ್ನಿಕಲ್) ಸ್ಕ್ವಾಡ್ರನ್‌ನ ಕಮಾಂಡಿಂಗ್ ಆಫೀಸರ್ ಗ್ರೂಪ್ ಕ್ಯಾಪ್ಟನ್ ರಾಜೇಶ್ ಚಂದ್ರ ಮಾತನಾಡಿ, ಯೂನಿಟ್‌ನ ಎಲ್ಲಾ ಟ್ರೂಪ್‌ಗಳ ನೇತೃತ್ವದಲ್ಲಿ ನಡೆದ ಪರಿಸರ ದಿನಾಚರಣೆ ಕಾರ್ಯಕ್ರಮಗಳ ಕುರಿತು ಶ್ಲಾಘಿಸಿದರು.

ಇದನ್ನೂ ಓದಿ: Electric Airport Taxi : ಕೆಂಪೇಗೌಡ ಏರ್‌ಪೋರ್ಟ್‌ನಲ್ಲಿ ಇನ್ಮುಂದೆ ಮಹಿಳೆಯರಿಗಾಗಿ ಗುಲಾಬಿ ಟ್ಯಾಕ್ಸಿ

ಕಾರ್ಯಕ್ರಮದಲ್ಲಿ ಐ.ಟಿ.ಐ. ಸೆಂಟ್ರಲ್ ಶಾಲೆಯ ಹಿರಿಯ ಆಡಳಿತಾಧಿಕಾರಿ ಲತಾ, ಪ್ರಾಂಶುಪಾಲ ಪೊನ್ಮಲಾರ್ ಹಾಗೂ ಎನ್‌ಸಿಸಿ ಸಹ ಅಧಿಕಾರಿಗಳಾದ ಬಾಲಕೃಷ್ಣ ವಿ.ಎಚ್.ಜೆ. ಕೃಷ್ಣಪ್ಪ, ನಜೀರ್ ಅಹಮದ್, ಜಸ್ಟಿನ್, ಜಗದೀಶ್, ವಿವೇಕ್ ಹೆಗ್ಡೆ, ಆದರ್ಶ್ ಕುಮಾರ್ ಮತ್ತು ನವೀನ್ ಶರ್ಮ, ಸಾರ್ಜಂಟ್ ರವಿ ಸತಿ ಸೇರಿದಂತೆ ಇತರರು ಉಪಸ್ಥಿತರಿದ್ದರು.

Continue Reading

ಪ್ರವಾಸ

Norway Tour: ಜಗತ್ತಿನ ಕೊನೆಯ ದೇಶ ಇದು! ಇಲ್ಲಿ 6 ತಿಂಗಳು ಹಗಲು, 6 ತಿಂಗಳು ರಾತ್ರಿ!

ಉತ್ತರ ಧ್ರುವದ ಸಾಮೀಪ್ಯದಿಂದಾಗಿ ಭೂಮಿಯ ಮೇಲಿನ ಕೊನೆಯ ದೇಶ ಎಂದು ಕರೆಯಲ್ಪಡುವ ನಾರ್ವೆಯಲ್ಲಿ (Norway Tour) ಮಧ್ಯರಾತ್ರಿ ಸೂರ್ಯ ಕಾಣಿಸಿಕೊಳ್ಳುತ್ತಾನೆ. ಆರು ತಿಂಗಳ ನಿರಂತರ ಹಗಲು ಅಥವಾ ಕತ್ತಲೆಯಂತಹ ವಿಶಿಷ್ಟ ವಿದ್ಯಮಾನಗಳನ್ನು ಇಲ್ಲಿ ಅನುಭವಿಸಬಹುದು. ಇಲ್ಲಿನ ಇ-69 ಹೆದ್ದಾರಿಯು ಜಗತ್ತಿನ ಕೊನೆಯನ್ನು ಸೂಚಿಸುತ್ತದೆ. ಆದರೆ ಈ ರಸ್ತೆಯಲ್ಲಿ ಏಕವ್ಯಕ್ತಿ ಪ್ರಯಾಣವನ್ನು ನಿಷೇಧಿಸಲಾಗಿದೆ.

VISTARANEWS.COM


on

By

Norway Tour
Koo

ಭೂಮಿಯು (earth) ದುಂಡಗಾಗಿದೆ ಎಂದು ನಮಗೆಲ್ಲರಿಗೂ ತಿಳಿದಿದೆ. ಈ ಭೂಮಿಯ ಮೂಲೆ ಮೂಲೆಯಲ್ಲಿ ಒಂದಲ್ಲ ಒಂದು ದೇಶವಿದೆ (country). ಪ್ರತಿಯೊಂದು ದೇಶವು ಅದರ ನೈಸರ್ಗಿಕ ಸೌಂದರ್ಯದಿಂದಾಗಿ (natural beauty) ಸುಂದರವಾಗಿರುತ್ತದೆ. ಕೆಲವು ದೇಶಗಳು ತಮ್ಮ ಐತಿಹಾಸಿಕ ಕಟ್ಟಡಗಳಿಗೆ (historical buildings) ಪ್ರಸಿದ್ಧವಾಗಿವೆ, ಇತರವುಗಳು ತಮ್ಮ ನೈಸರ್ಗಿಕ ದೃಶ್ಯಾವಳಿಗಳಿಂದ. ವಿಶ್ವದ ಅತಿದೊಡ್ಡ ಮತ್ತು ಶ್ರೀಮಂತ ದೇಶಗಳ ಬಗ್ಗೆ ಎಲ್ಲರೂ ಕೇಳಿರಬಹುದು, ಆದರೆ ಭೂಮಿಯ ಮೇಲಿನ ಕೊನೆಯ ದೇಶ ಯಾವುದು ಗೊತ್ತೇ ಅಲ್ಲಿನ ವಿಶೇಷತೆ ಏನು ಗೊತ್ತೇ ?

ವಿಶ್ವದ ಕೊನೆಯ ದೇಶ ನಾರ್ವೆ (Norway Tour). ಇಲ್ಲಿ ಭೂಮಿ ಕೊನೆಗೊಳ್ಳುತ್ತದೆ. ಈ ದೇಶವು ಉತ್ತರ ಧ್ರುವದ ಬಳಿ ಇದೆ. ಅಲ್ಲಿ ಭೂಮಿಯು ತನ್ನ ಅಕ್ಷದ ಮೇಲೆ ತಿರುಗುತ್ತದೆ. ಆದ್ದರಿಂದ, ನಾರ್ವೆ ಹೇಗಿದೆ ಎಂದು ಊಹಿಸಿಕೊಳ್ಳಬಹುದು.
ಬಹಳ ಸುಂದರವಾಗಿರುವ ಈ ದೇಶದಲ್ಲಿ ರಾತ್ರಿ ಬಹಳ ಕಡಿಮೆ. ರಾತ್ರಿಯೇ ಇರುವುದಿಲ್ಲ ಎಂದು ತಿಳಿದರೆ ಆಶ್ಚರ್ಯವಾಗಬಹುದು.

ಉತ್ತರ ನಾರ್ವೆಯ ಹ್ಯಾವರ್‌ಫೆಸ್ಟ್ ನಗರದಲ್ಲಿ, ಸೂರ್ಯ ಕೇವಲ 40 ನಿಮಿಷಗಳ ಕಾಲ ಅಸ್ತಮಿಸುತ್ತಾನೆ. ಆದ್ದರಿಂದ, ಇದನ್ನು ಮಧ್ಯರಾತ್ರಿ ಸೂರ್ಯನ ದೇಶ ಎಂದೂ ಕರೆಯುತ್ತಾರೆ. ಇಲ್ಲಿ ಕೇವಲ 40 ನಿಮಿಷ ಮಾತ್ರ ಕತ್ತಲು, ಉಳಿದ 23 ಗಂಟೆ 20 ನಿಮಿಷಗಳ ಕಾಲ ಈ ನಗರವು ಬೆಳಕಿನಿಂದ ತುಂಬಿರುತ್ತದೆ.


ಬೇಸಿಗೆಯಲ್ಲಿ ಹಿಮ

ಬೇಸಿಗೆಯಲ್ಲಿ ಇಲ್ಲಿ ಹಿಮ ಹೆಪ್ಪುಗಟ್ಟುತ್ತದೆ. ಈ ದೇಶವು ಅತ್ಯಂತ ತಂಪಾದ ವಾತಾವರಣವನ್ನು ಹೊಂದಿದೆ. ಪ್ರಪಂಚದ ಕೆಲವು ದೇಶಗಳಲ್ಲಿ ಬೇಸಿಗೆಯಲ್ಲಿ ತಾಪಮಾನವು 45 ರಿಂದ 50 ಡಿಗ್ರಿಗಳ ನಡುವೆ ಇದ್ದರೆ ಈ ದೇಶದಲ್ಲಿ ಬೇಸಿಗೆಯಲ್ಲಿ ಹಿಮ ಇರುತ್ತದೆ. ಈ ಸಮಯದಲ್ಲಿ ಇಲ್ಲಿ ತಾಪಮಾನ ಶೂನ್ಯ ಡಿಗ್ರಿ. ತೀವ್ರವಾದ ಚಳಿಗಾಲದಲ್ಲಿ ಇಲ್ಲಿ ತಾಪಮಾನವು ಮೈನಸ್ 45 ಡಿಗ್ರಿಗಳಿಗೆ ಇಳಿಯುತ್ತದೆ. ಇಲ್ಲಿನ ಸೌಂದರ್ಯವೇ ಬೇರೆಯದೇ ಪ್ರಪಂಚವನ್ನು ಸೃಷ್ಟಿಸುತ್ತದೆ.

ರಾತ್ರಿಯೇ ಇರುವುದಿಲ್ಲ

ಬೇಸಿಗೆಯಲ್ಲಿ ಇಲ್ಲಿ ರಾತ್ರಿ ಇರುವುದಿಲ್ಲ. ಉತ್ತರ ಧ್ರುವದ ಸಾಮೀಪ್ಯದಿಂದಾಗಿ ಇತರ ದೇಶಗಳಂತೆ ಪ್ರತಿದಿನ ಹಗಲು ಅಥವಾ ರಾತ್ರಿ ಇರುವುದಿಲ್ಲ. ಬದಲಾಗಿ ಇದು ಆರು ತಿಂಗಳು ಹಗಲು ಮತ್ತು ಆರು ತಿಂಗಳು ರಾತ್ರಿಯನ್ನು ಹೊಂದಿದೆ. ಚಳಿಗಾಲದಲ್ಲಿ ಇಲ್ಲಿ ಸೂರ್ಯನು ಕಾಣಿಸುವುದಿಲ್ಲ, ಆದರೆ ಬೇಸಿಗೆಯಲ್ಲಿ ಇಲ್ಲಿ ಸೂರ್ಯ ಮುಳುಗುವುದಿಲ್ಲ. ತುಂಬಾ ಆಸಕ್ತಿದಾಯಕವಾಗಿರುವ ಈ ದೇಶವನ್ನು ನೋಡಲು ಸಾಕಷ್ಟು ಪ್ರವಾಸಿಗರು ಆಗಮಿಸುತ್ತಾರೆ.


ಜಗತ್ತಿನ ಕೊನೆ

ಇಷ್ಟೆಲ್ಲಾ ಗೊತ್ತಾದ ಮೇಲೆ ನಾವು ನಾರ್ವೆಗೆ ಹೋಗಬೇಕು ಎನಿಸುವುದರಲ್ಲಿ ಸಂದೇಹವಿಲ್ಲ. ಆದರೆ ಈ ದೇಶದ ಇ-69 ಹೆದ್ದಾರಿಯಲ್ಲಿ ಏಕಾಂಗಿಯಾಗಿ ಹೋಗುವುದನ್ನು ನಿಷೇಧಿಸಲಾಗಿದೆ. ಯಾಕೆಂದರೆ ಈ ಹೆದ್ದಾರಿಯು ಭೂಮಿಯ ತುದಿಗಳನ್ನು ನಾರ್ವೆಗೆ ಸಂಪರ್ಕಿಸುತ್ತದೆ. ಮುಂದೆ ಹೋದಂತೆ ಇಲ್ಲಿಯೇ ರಸ್ತೆ ಕೊನೆಗೊಳ್ಳುತ್ತದೆ. ಅಲ್ಲಿಗೆ ತಲುಪಿದಾಗ ಎಲ್ಲಿಗೆ ಹೋಗಬೇಕೆಂದು ತಿಳಿಯುವುದಿಲ್ಲ. ಯಾಕೆಂದರೆ ಇಲ್ಲಿ ಜಗತ್ತು ಕೊನೆಗೊಳ್ಳುತ್ತದೆ.


ಏಕವ್ಯಕ್ತಿ ಪ್ರಯಾಣ ನಿಷೇಧ

ಈ ಹೆದ್ದಾರಿಯಲ್ಲಿ ಹೋಗಬೇಕೆಂದರೂ ಒಬ್ಬರೇ ಹೋಗುವುದು ನಿಷಿದ್ಧ. ಒಂದು ದೊಡ್ಡ ಗುಂಪಿಗೆ ಮಾತ್ರ ಹೋಗಲು ಅನುಮತಿಸಲಾಗುತ್ತದೆ. ಈ ರಸ್ತೆಯಲ್ಲಿ ಯಾವುದೇ ವ್ಯಕ್ತಿ ಏಕಾಂಗಿಯಾಗಿ ಹೋಗಲು ಅಥವಾ ಏಕಾಂಗಿಯಾಗಿ ವಾಹನ ಚಲಾಯಿಸಲು ಅವಕಾಶವಿಲ್ಲ. ಇಲ್ಲಿ ಎಲ್ಲೆಂದರಲ್ಲಿ ಹಿಮವಿದ್ದು, ಏಕಾಂಗಿಯಾಗಿ ಪ್ರಯಾಣಿಸಿ ದಾರಿ ತಪ್ಪುವ ಸಾಧ್ಯತೆ ಇರುವುದರಿಂದ ಏಕಾಂಗಿ ಪ್ರಯಾಣವನ್ನು ನಿಷೇಧಿಸಲಾಗಿದೆ.

ಇದನ್ನೂ ಓದಿ: Konark Tourist Destination: ರಜೆಯಲ್ಲಿ ಕೋನಾರ್ಕ್‌ಗೆ ಹೋದಾಗ ಈ ಅದ್ಭುತ ಸ್ಥಳಗಳಿಗೆ ಭೇಟಿ ನೀಡಲು ಮರೆಯಬೇಡಿ

ಈ ದೇಶದಲ್ಲಿ ಪೋಲಾರ್ ಲೈಟ್‌ಗಳನ್ನು ನೋಡಿ ಆನಂದಿಸಬಹುದು. ಇಲ್ಲಿ ಸೂರ್ಯಾಸ್ತ ಮತ್ತು ಧ್ರುವ ದೀಪಗಳನ್ನು ವೀಕ್ಷಿಸುವುದು ವಿನೋದಮಯವಾಗಿದೆ. ವರ್ಷಗಳ ಹಿಂದೆ ಇಲ್ಲಿ ಮೀನು ವ್ಯಾಪಾರ ನಡೆಯುತ್ತಿತ್ತು ಎಂದು ಹೇಳಲಾಗುತ್ತದೆ. ಆದರೆ ಕ್ರಮೇಣ ದೇಶವು ಅಭಿವೃದ್ಧಿ ಹೊಂದಿತು ಮತ್ತು ಪ್ರವಾಸಿಗರು ಇಲ್ಲಿಗೆ ಬರಲು ಪ್ರಾರಂಭಿಸಿದರು. ಈಗ ಪ್ರವಾಸಿಗರು ಇಲ್ಲಿ ಉಳಿದುಕೊಳ್ಳಲು ಹೊಟೇಲ್ ಮತ್ತು ರೆಸ್ಟೋರೆಂಟ್‌ಗಳ ಸೌಲಭ್ಯವನ್ನೂ ಪಡೆಯುತ್ತಾರೆ.

Continue Reading
Advertisement
Narendra Modi
ದೇಶ3 mins ago

Narendra Modi: ಮೋದಿ ಪ್ರಮಾಣವಚನ; ಇಂದಿನ ಕಾರ್ಯಕ್ರಮ ಏನೇನು? ಹೇಗಿದೆ ಭದ್ರತೆ, ಸಿದ್ಧತೆ?

Narendra Modi
ದೇಶ33 mins ago

Narendra Modi: 3ನೇ ಬಾರಿ ಪ್ರಧಾನಿಯಾಗಿ ಇಂದು ಸಂಜೆ ಮೋದಿ ಪ್ರಮಾಣ; ಇಲ್ಲಿದೆ ಬಾಲ್ಯದಿಂದ ವಿಶ್ವಗುರುತನಕದ ಜೀವನ ಚಿತ್ರಣ

5:2 Diet
ಆರೋಗ್ಯ34 mins ago

5:2 Diet: ಏನಿದು 5:2 ಮಧ್ಯಂತರ ಉಪವಾಸ? ಇದರ ಪ್ರಯೋಜನಗಳೇನು?

IND vs PAK
ಕ್ರೀಡೆ1 hour ago

IND vs PAK: ಇಂದು ಇಂಡೋ-ಪಾಕ್​ ರೋಚಕ ಟಿ20 ಕದನ; ವಿಜಯ ಪತಾಕೆ ಹಾರಿಸಲಿ ಭಾರತ

Dina Bhavishya
ಭವಿಷ್ಯ2 hours ago

Dina Bhavishya : ಗೌಪ್ಯ ವಿಷಯಗಳನ್ನು ಹಂಚಿಕೊಳ್ಳುವ ಮುನ್ನ ಇರಲಿ ಎಚ್ಚರಿಕೆ

NED vs RSA
T20 ವಿಶ್ವಕಪ್7 hours ago

NED vs RSA: ಹೋರಾಡಿ ಸೋತ ನೆದರ್ಲೆಂಡ್ಸ್​; ಹರಿಣ ಪಡೆಗೆ ಪ್ರಯಾಸದ ಗೆಲುವು

Karnataka police
ಕರ್ನಾಟಕ9 hours ago

Davanagere News: ದಾವಣಗೆರೆಯಲ್ಲಿ ಮುಸ್ಲಿಂ ಯುವಕರಿಂದ ನೈತಿಕ ಪೊಲೀಸ್‌ಗಿರಿ; ನಾಲ್ವರ ಬಂಧನ

French Open Final 2024
ಪ್ರಮುಖ ಸುದ್ದಿ9 hours ago

French Open Final 2024: 4ನೇ​ ಫ್ರೆಂಚ್‌ ಓಪನ್‌ ಟ್ರೋಫಿ ಗೆದ್ದ ಇಗಾ ಸ್ವಿಯಾಟೆಕ್‌

Govt Employees
ಕರ್ನಾಟಕ9 hours ago

Govt Employees: ಪ್ರತಿ ಸೋಮವಾರ ಕೇಂದ್ರ ಕಚೇರಿಗಳಿಗೆ ಅಧಿಕಾರಿ, ನೌಕರರ ಹಾಜರು ಕಡ್ಡಾಯ: ರಾಜ್ಯ ಸರ್ಕಾರ ಆದೇಶ

Kisan Samman Nidhi
ಪ್ರಮುಖ ಸುದ್ದಿ9 hours ago

Kisan Samman Nidhi: ರೈತರಿಗೆ ಗುಡ್‌ ನ್ಯೂಸ್;‌ ಕಿಸಾನ್‌ ಸಮ್ಮಾನ್‌ ನಿಧಿ 2 ಸಾವಿರ ರೂ. ಹೆಚ್ಚಳ, ಇನ್ನು ಸಿಗೋದು 8 ಸಾವಿರ ರೂ.!

Sharmitha Gowda in bikini
ಕಿರುತೆರೆ8 months ago

Geetha Serial Kannada: ನಿದ್ದೆ ಕದ್ದ ಚೋರಿ! ನಟಿ `ಭಾನುಮತಿ’ ಹಾಟ್‌ ಪೋಟೊಗಳಿಗೆ ಫ್ಯಾನ್ಸ್ ಫುಲ್ ಫಿದಾ

Kannada Serials
ಕಿರುತೆರೆ8 months ago

Kannada Serials TRP: 2ನೇ ಸ್ಥಾನದಲ್ಲಿ 2 ಧಾರಾವಾಹಿಗಳು; ಟಿಆರ್‌ಪಿ ರೇಸ್‌ನಲ್ಲಿಲ್ಲ ಭಾಗ್ಯಲಕ್ಷ್ಮೀ!

Bigg Boss- Saregamapa 20 average TRP
ಕಿರುತೆರೆ8 months ago

Kannada Serials TRP: ಏಳನೇ ಸ್ಥಾನಕ್ಕೆ ʻಅಮೃತಧಾರೆʼ ಕುಸಿತ; ಬಿಗ್‌ ಬಾಸ್‌-ಸರಿಗಮಪ ಟಿಆರ್‌ಪಿ ಎಷ್ಟು?

galipata neetu
ಕಿರುತೆರೆ6 months ago

Kanyadana Serial: ಕಿರುತೆರೆಗೆ ಮತ್ತೆ ಎಂಟ್ರಿ ಕೊಟ್ಟ ʻಗಾಳಿಪಟʼ ಖ್ಯಾತಿಯ ʻನೀತುʼ!

Kannada Serials
ಕಿರುತೆರೆ8 months ago

Kannada Serials TRP: ನಾಲ್ಕನೇ ಸ್ಥಾನಕ್ಕೆ ಕುಸಿತ ಕಂಡ ʻಸೀತಾ ರಾಮʼ; ಟಿಆರ್‌ಪಿ ರೇಸ್‌ಗೆ ʻಭಾಗ್ಯಲಕ್ಷ್ಮಿʼ ಬ್ಯಾಕ್‌!

Kannada Serials
ಕಿರುತೆರೆ8 months ago

Kannada Serials TRP: ಟಿಆರ್‌ಪಿಯಲ್ಲಿ ʻಭಾಗ್ಯಲಕ್ಷ್ಮೀʼ ಹವಾ; ʻಪುಟ್ಟಕ್ಕನ ಮಕ್ಕಳುʼ ಧಾರಾವಾಹಿಗೆ ಸಂಕಷ್ಟ!

Bigg Boss' dominates TRP; Sita Rama fell to the sixth position
ಕಿರುತೆರೆ8 months ago

Kannada Serials TRP: ಟಿಆರ್‌ಪಿಯಲ್ಲಿ ʻಬಿಗ್ ಬಾಸ್ʼದೇ ಮೇಲುಗೈ; 6ನೇ ಸ್ಥಾನಕ್ಕೆ ಕುಸಿದ ʻಸೀತಾ ರಾಮʼ

geetha serial Dhanush gowda engagement
ಕಿರುತೆರೆ6 months ago

Dhanush Gowda: ಗೀತಾ ಧಾರಾವಾಹಿ ನಟನ ನಿಶ್ಚಿತಾರ್ಥ; ಭವ್ಯಾಳ ಕಮೆಂಟ್‌ ಬಾಕ್ಸ್‌ ಆಫ್‌!

varun
ಕಿರುತೆರೆ7 months ago

Brindavana Serial: ʼಬೃಂದಾವನʼ ಧಾರಾವಾಹಿಯಲ್ಲಿ ದೊಡ್ಡ ಟ್ವಿಸ್ಟ್‌; ಪ್ರಮುಖ ಪಾತ್ರಧಾರಿಯೇ ಬದಲು

Kannada Serials
ಕಿರುತೆರೆ9 months ago

Kannada Serials TRP: ಟಿಆರ್‌ಪಿಯಲ್ಲಿ ಏರಿಕೆ ಕಂಡ ʻಅಮೃತಧಾರೆʼ; ʻಗಟ್ಟಿಮೇಳʼಕ್ಕೆ ನಾಲ್ಕನೇ ಸ್ಥಾನ!

Karnataka weather Forecast
ಮಳೆ1 day ago

Karnataka weather : ಮಳೆಯಲ್ಲೆ ತಪಸ್ಸಿಗೆ ಕುಳಿತ ವೃದ್ಧ; ಇನ್ನೊಂದು ವಾರ ನಾನ್‌ ಸ್ಟಾಪ್‌ ವರುಣನ ಅಬ್ಬರ

Sigandur launch
ಶಿವಮೊಗ್ಗ2 days ago

Sigandur launch: ಸಿಗಂದೂರು ಲಾಂಚ್‌ನಲ್ಲಿ ಭಾರಿ ವಾಹನಗಳಿಗೆ ನಿರ್ಬಂಧ

Karnataka Rain
ಮಳೆ3 days ago

Karnataka Rain : ಭಾರಿ ಮಳೆಗೆ ಮರ ಬಿದ್ದು ಮೇಕೆಗಳು ಸಾವು; ಸಿಡಿಲಿಗೆ ಎಲೆಕ್ಟ್ರಿಕ್‌ ಅಂಗಡಿ ಸುಟ್ಟು ಭಸ್ಮ

Lok Sabha Election Result 2024 Live
ದೇಶ5 days ago

Lok Sabha Election Result 2024 Live: ಲೋಕಸಭೆ ಚುನಾವಣೆ ಫಲಿತಾಂಶದ ಲೈವ್‌ ಇಲ್ಲಿ ವೀಕ್ಷಿಸಿ

Karnataka Rain
ಮಳೆ6 days ago

Karnataka Rain : 133 ವರ್ಷದ ರೆಕಾರ್ಡ್ ಬ್ರೇಕ್ ಮಾಡಿದ ʻಬೆಂಗಳೂರು ಮಳೆʼ

Snake Rescue Snakes spotted in heavy rain
ಮಳೆ6 days ago

Snake Rescue: ಮಳೆ ನೀರಿನಲ್ಲಿ ಹರಿದು ಬಂದು ಬೈಕ್‌ನಲ್ಲಿ ಸೇರಿಕೊಂಡ ಹಾವು; ಮನೆಗಳಲ್ಲೂ ಪ್ರತ್ಯಕ್ಷ

Karnataka Rain
ಮಳೆ7 days ago

Karnataka Rain : ವೀಕೆಂಡ್‌ ಮೋಜಿಗೆ ವರುಣ ಅಡ್ಡಿ; ಭಾನುವಾರ ಸಂಜೆಗೆ ಮಳೆ ಕಾಟ

Liquor ban
ಬೆಂಗಳೂರು1 week ago

Liquor Ban : ಮುಂದಿನ ಏಳು ದಿನಗಳಲ್ಲಿ ನಾಲ್ಕೂವರೆ ದಿನ ಬಾರ್ ಕ್ಲೋಸ್; ಎಣ್ಣೆ ಸಿಗೋದು ಯಾವ ದಿನ?

Assault Case in Shivamogga
ಕ್ರೈಂ1 week ago

Assault Case : ಶಿವಮೊಗ್ಗದಲ್ಲಿ ಮತ್ತೆ ಬಾಲ ಬಿಚ್ಚಿದ ಪುಂಡರು; ಗಾಂಜಾ ನಶೆಯಲ್ಲಿ ವಾಹನಗಳು ಪೀಸ್‌ ಪೀಸ್‌

Karnataka weather Forecast
ಮಳೆ2 weeks ago

Karnataka Weather : ಚಿಕ್ಕಮಗಳೂರಲ್ಲಿ ಭಾರಿ ಮಳೆ; ಯಾದಗಿರಿಯಲ್ಲಿ ಕರೆಂಟ್‌ ಕಟ್‌, ಜನರೇಟರ್‌ನಿಂದ ಮೊಬೈಲ್‌ಗಳಿಗೆ ಚಾರ್ಜಿಂಗ್‌!

ಟ್ರೆಂಡಿಂಗ್‌