Caste Census : ಜಾತಿ ಗಣತಿ ವರದಿಗೆ ಭಾರಿ ಅಪಸ್ವರ; ಅವೈಜ್ಞಾನಿಕ ಎಂದ ಸಿದ್ದಗಂಗಾ ಶ್ರೀ - Vistara News

ರಾಜಕೀಯ

Caste Census : ಜಾತಿ ಗಣತಿ ವರದಿಗೆ ಭಾರಿ ಅಪಸ್ವರ; ಅವೈಜ್ಞಾನಿಕ ಎಂದ ಸಿದ್ದಗಂಗಾ ಶ್ರೀ

Caste Census : ಜಾತಿ ಗಣತಿ ವರದಿ ಮತ್ತೆ ಸುದ್ದಿ ಮಾಡುತ್ತಿದೆ. ಅದು ಮಂಡನೆಯಾಗುತ್ತಿದ್ದಂತೆಯೇ ಅದು ಅವೈಜ್ಞಾನಿಕ ಎಂಬ ಆಪಾದನೆಗಳಿಗೆ ಮತ್ತೆ ಚಾಲನೆ ಸಿಕ್ಕಿದೆ.

VISTARANEWS.COM


on

Caste Census siddalinga Swameeji
ಮಹತ್ವದ, ಕುತೂಹಲಕರ ಸುದ್ದಿಗಾಗಿ ಫಾಲೊ ಮಾಡಿ
Koo

ಬೆಂಗಳೂರು: ಬಹು ವಿವಾದಿತ ಜಾತಿ ಗಣತಿ ವರದಿಯನ್ನು (Caste Census report) ಕೊನೆಗೂ ರಾಜ್ಯ ಸರ್ಕಾರ ಸ್ವೀಕಾರ ಮಾಡಿದೆ. ಇದರ ನಡುವೆಯೇ ಈ ವರದಿ ಅವೈಜ್ಞಾನಿಕ ಎಂಬ ಅಪಸ್ವರ ಮತ್ತೆ ಜೋರಾಗಿದೆ. ಸಿಎಂ ಸಿದ್ದರಾಮಯ್ಯ ಅವರು ಹಿಂದುಳಿದ ವರ್ಗಗಳ ಆಯೋಗದ (Backward Classes Commission) ಅಧ್ಯಕ್ಷ ಜಯಪ್ರಕಾಶ್‌ ಹೆಗ್ಡೆ (Jayaprakash Hegde) ಅವರಿಂದ ಸ್ವೀಕಾರ ಮಾಡಿದ ಈ ವರದಿಯ ಬಗ್ಗೆ ಮೊದಲಿನಿಂದಲೂ ಲಿಂಗಾಯತ ಮತ್ತು ಒಕ್ಕಲಿಗ ಸಮುದಾಯದಿಂದ ಆಕ್ಷೇಪವಿದೆ. ವರದಿ ಮಂಡನೆಯಾಗುತ್ತಿದ್ದಂತೆಯೇ ಪ್ರತಿಕ್ರಿಯಿಸಿರುವ ತುಮಕೂರಿನ ಸಿದ್ದಗಂಗಾ ಮಠದ ಶ್ರೀ ಸಿದ್ದಲಿಂಗಸ್ವಾಮೀಜಿ (Siddalinga swameeji) ಅವರು, ಇದು ವೈಜ್ಞಾನಿಕವಾಗಿಲ್ಲ ಎಂಬ ಪರೋಕ್ಷ ಅಭಿಪ್ರಾಯ ವ್ಯಕ್ತಪಡಿಸಿದರು.

ʻʻಜಾತಿ ಗಣತಿ‌ ವಿಚಾರದಲ್ಲಿ ಸರ್ಕಾರ ಯಾವ ನಿರ್ಧಾರ ತೆಗೆದುಕೊಳ್ಳುತ್ತದೋ ಗೊತ್ತಿಲ್ಲ. ಇದಕ್ಕೆ ಯಾರೂ ವಿರೋಧ ಮಾಡಲು ಸಾಧ್ಯವಿಲ್ಲ. ಯಾಕೆಂದರೆ ಜಾತಿ ಆಧಾರದ ಮೇಲೆ ಸವಲತ್ತುಗಳನ್ನು ಕೊಡಬೇಕಾಗುತ್ತದೆ. ಈ ವರದಿಯನ್ನು ವೈಜ್ಞಾನಿಕವಾಗಿ ರೂಪಿಸಲಾಗಿಲ್ಲ ಎಂಬ ಮಾತು ಕೇಳಿಬರುತ್ತಿದೆʼʼ ಎಂದು ಶ್ರೀಗಳು ಹೇಳಿದರು.

ವ್ಯಾಪಕವಾಗಿ ಎಲ್ಲರನ್ನೂ ಸಂದರ್ಶನ ಮಾಡಿಲ್ಲ ಎಂಬ ಕೂಗು ಕೇಳಿಬರುತ್ತಿದೆ. ಗಣತಿ ವಿಚಾರದಲ್ಲಿ ಎಲ್ಲರಿಗೂ ಸಂದರ್ಶನ ಆಗಿದೆಯೋ ಗೊತ್ತಿಲ್ಲ, ನನ್ನನ್ನಂತೂ ಯಾರೂ ಬಂದು ಸಂದರ್ಶನ ಮಾಡಿಲ್ಲ. ಎಲ್ಲರನ್ನೂ ಕೇಳಿ, ಪ್ರತಿಯೊಬ್ಬರನ್ನು ವಿಚಾರಿಸಿ ವರದಿ ಮಾಡಿದರೆ ಸೂಕ್ತ. ಎಲ್ಲರಿಗೂ ಸೌಲಭ್ಯ ಲಭ್ಯವಾಗುವ ರೀತಿಯಲ್ಲಿ ಮಾಡಿದರೆ ಉಪಕಾರವಾಗುತ್ತದೆ ಎಂದು ಶ್ರೀಗಳು ಹೇಳಿದರು.

ʻʻನಾನ್ಯಾವ ಜಾತಿ, ಏನು ಅಂತಾ ಯಾರೂ, ಯಾವ ಮಾಹಿತಿಯನ್ನೂ ಕೇಳಿಲ್ಲ. ಎಲ್ಲರ ಬಳಿಯೂ ಹೋಗಿದ್ವಿ ಅಂತಾ ಹೇಳ್ತಾರಲ್ವಾ? ನನ್ನ ಬಳಿಯೇ ಬಂದಿಲ್ಲʼʼ ಎಂದು ಹೇಳಿರುವ ಸಿದ್ದಗಂಗಾ ಶ್ರೀಗಳು ಪರೋಕ್ಷವಾಗಿ ವರದಿ ವೈಜ್ಞಾನಿಕವಾಗಿ ಆಗಿಲ್ಲ ಎಂದಿದ್ದಾರೆ.

ʻʻಪ್ರತಿಯೊಬ್ಬರನ್ನು ಕೇಳ್ತಾರಾ? ಅಥವಾ ಸಮಾಜದ ಮುಖಂಡರನ್ನ ಮಾತ್ರ ಕೇಳ್ತಾರಾ? ಏನು ಅಂತಾ ಗೊತ್ತಿಲ್ಲ. ಹಾಗಾಗಿ ನಾನು ಅದರ ಬಗ್ಗೆ ಮಾತನಾಡೋಕೆ ಹೋಗಲ್ಲ. ಎಲ್ಲರನ್ನೂ ಒಳಗೊಂಡಂತ ವರದಿ ಸ್ವೀಕಾರ ಆಗಲಿ. ಮತ್ತು ಆಯಾ ಜಾತಿಯ ಜನಸಂಖ್ಯೆ ಆಧಾರದ ಮೇಲೆ ಸೌಲಭ್ಯಗಳು ವಿತರಣೆ ಆಗಲಿʼʼ ಎನ್ನುವುದು ಶ್ರೀಗಳ ಅಭಿಮತ.

ಜಾತಿ ಗಣತಿಯಲ್ಲಿ ಕೆಲವು ದೋಷಗಳಿವೆ ಎಂದ ಲಕ್ಷ್ಮೀ ಹೆಬ್ಬಾಳ್ಕರ್‌

ಈ ನಡುವೆ ರಾಮನಗರದಲ್ಲಿ ಮಾತನಾಡಿದ ಮಹಿಳಾ ಮತ್ತು ಮಕ್ಕಳ ಕಲ್ಯಾಣ ಖಾತೆ ಸಚಿವೆ ಲಕ್ಷ್ಮೀ ಹೆಬ್ಬಾಳ್ಕರ್‌ (Lakshmi Hebbalkar) ಅವರು, ಈ ವಿಚಾರದಲ್ಲಿ ರಾಜಕೀಯ ಮಾಡುವುದಿಲ್ಲ. ಎಲ್ಲಾ ಸಮುದಾಯಕ್ಕೂ ಸಮಾನ ಅವಕಾಶ ಸಿಗಬೇಕು. ಆದರೆ ಈ ಜನಗಣತಿಯಲ್ಲಿ ಕೆಲ ದೋಷಗಳಿವೆ ಎಂದು ಹೇಳಿದರು.

ʻʻನಾಲ್ಕು ಜನರ ಮನೆಗೆ ಹೋಗಿದ್ದರೆ, ಇನ್ನು ಕೆಲವರ ಮನೆಗೆ ಹೋಗಲೇ ಇಲ್ಲ. ನಮ್ಮ ಸಂಬಂಧಿಕರ ಹಲವು ಮನೆಗಳಿಗೆ ಬಂದೇ ಇಲ್ಲ. ಹೀಗಾಗಿ ಈ ರೀತಿಯ ಕೆಲ ಗೊಂದಲಗಳಿವೆ. ವೀರಶೈವ ಲಿಂಗಾಯತ ಜಾತಿಯಲ್ಲಿ ಅನೇಕ ಉಪಪಂಗಡಗಳಿವೆ‌. 103 ಉಪ ಪಂಗಡಳಿರುವುದರಿಂದ ಅಧ್ಯಯನ ಮಾಡಬೇಕು. ಇದರ ವೈಜ್ಞಾನಿಕ ವರದಿ ಮಾಡಿ ಬಳಿಕ ಸ್ವೀಕರಿಸಬೇಕು. ಇದರಲ್ಲಿ ನಾವು ರಾಜಕೀಯ ಮಾಡಲ್ಲ.ʼʼ ಎಂದು ಮಾಗಡಿಯಲ್ಲಿ ಸಚಿವೆ ಲಕ್ಷ್ಮೀ ಹೆಬ್ಬಾಳ್ಕರ್ ಹೇಳಿದರು.

ಇದನ್ನೂ ಓದಿ Caste Census: ಬಹು ವಿವಾದಿತ ಜಾತಿ ಗಣತಿ ವರದಿ ಸ್ವೀಕರಿಸಿದ ಸಿದ್ದರಾಮಯ್ಯ; ಜೇನುಗೂಡಿಗೆ ಕೈ ಹಾಕಿತೇ ಸರ್ಕಾರ?

ಹಾಲಿ ವರದಿಯಲ್ಲೇನಿದೆ?

ಆಯೋಗದ ಅಧ್ಯಕ್ಷ ಜಯಪ್ರಕಾಶ್ ಹೆಗ್ಡೆ ಅವರ ಹೇಳಿಕೆ ಅನುಸಾರ ಇದು ಸಾಮಾಜಿಕ ಮತ್ತು ಶೈಕ್ಷಣಿಕ ಸಮೀಕ್ಷೆಯ ಸಮಗ್ರ ವರದಿಯಾಗಿದೆ. ಅಲ್ಲದೆ, ಜಾತಿವಾರು ಜನಸಂಖ್ಯೆ ವಿವರವನ್ನೂ ವರದಿಯಲ್ಲಿ ಉಲ್ಲೇಖಿಸಲಾಗಿದೆ ಎಂದು ಜಯಪ್ರಕಾಶ್‌ ಹೆಗ್ಡೆ ತಿಳಿಸಿದ್ದಾರೆ.

ವರದಿಯಲ್ಲಿನ ಪ್ರಮುಖ ಅಂಶಗಳು

  1. ಜಾತಿವರ್ಗಗಳ ಪ್ರಮುಖ ಲಕ್ಷಣಗಳು ( ಎಸ್‌ಸಿ, ಎಸ್‌ಟಿ ಹೊರತುಪಡಿಸಿ)
  2. ಜಾತಿವರ್ಗಗಳ ಪ್ರಮುಖ ಲಕ್ಷಣಗಳು ( ಎಸ್‌ಸಿ ಸಂಪುಟ ೧)
  3. ಜಾತಿ ವರ್ಗಗಳ ಪ್ರಮುಖ ಲಕ್ಷಣಗಳು ( ಎಸ್‌ಟಿ ಸಂಪುಟ ೧)
  4. ವಿಧಾನಸಭಾ ಕ್ಷೇತ್ರವಾರು ಜಾತಿವಾರು ಅಂಕಿ ಅಂಶಗಳು
  5. ಸಾಮಾಜಿಕ ಮತ್ತು ಶೈಕ್ಷಣಿಕ ಸಮೀಕ್ಷೆ 2015ರ ದತ್ತಾಂಶದ ವರದಿ 2024

ಒಟ್ಟು 13 ಪ್ರತಿಗಳ ಸಮಗ್ರ ಸಂಪುಟ ವರದಿ ಇದಾಗಿದೆ. ಶೀಲ್ಡ್‌ ಬ್ಯಾಕ್ಸ್‌ನಲ್ಲಿ ವರದಿ ಪ್ರತಿಯನ್ನು ತರಲಾಗಿತ್ತು. ಹಿಂದುಳಿದ ವರ್ಗಗಳ ಆಯೋಗದ ಅಧ್ಯಕ್ಷ ಜಯಪ್ರಕಾಶ್ ಹೆಗ್ಡೆ ಹಾಗೂ ಆಯೋಗದ ಸದಸ್ಯರು ವರದಿ ಸಲ್ಲಿಕೆ ಮಾಡಿದ್ದಾರೆ.

ಕ್ಷಣ ಕ್ಷಣದ ಮಾಹಿತಿಗಾಗಿ Vistara News FaceBook ಪೇಜ್ ಫಾಲೋ ಮಾಡಿ
ಮಹತ್ವದ ಮಾಹಿತಿಗಾಗಿ ವಿಸ್ತಾರ ನ್ಯೂಸ್ ಆ್ಯಪ್ ಉಚಿತವಾಗಿ ಡೌನ್ ಲೋಡ್ ಮಾಡಿಕೊಳ್ಳಿ: Andriod App | IOS App
Continue Reading
Click to comment

Leave a Reply

Your email address will not be published. Required fields are marked *

Lok Sabha Election 2024

Yogendra Yadav: ಈ ಬಾರಿ ಬಿಜೆಪಿಗೆ ಬಹುಮತ ಬರಲ್ಲವೆಂದ ಯೋಗೇಂದ್ರ ಯಾದವ್; ಇವರ ಹಿಂದಿನ ಭವಿಷ್ಯ ನಿಜವಾಗಿತ್ತಾ?

Yogendra Yadav: ಚುನಾವಣಾ ತಜ್ಞ, ರಾಜಕೀಯ ವಿಶ್ಲೇಷಕ ಯೋಗೇಂದ್ರ ಯಾದವ್‌ ಅವರು ಪ್ರಸಕ್ತ ಲೋಕಸಭೆ ಚುನಾವಣೆ ಫಲಿತಾಂಶದ ಕುರಿತು ಭವಿಷ್ಯ ನುಡಿದಿದ್ದಾರೆ. ಬಿಜೆಪಿ ನೇತೃತ್ವದ ಎನ್‌ಡಿಎ ಮೈತ್ರಿಕೂಟಕ್ಕೆ ಹೇಗೆ ಕಡಿಮೆ ಸೀಟುಗಳು ಲಭಿಸುತ್ತವೆ ಎಂಬುದರ ಕುರಿತು ವಿಶ್ಲೇಷಣೆ ಮಾಡಿದ್ದಾರೆ. ಹಾಗಾದರೆ, ಯೋಗೇಂದ್ರ ಯಾದವ್‌ ಭವಿಷ್ಯ ಏನು? ಇದಕ್ಕೂ ಮೊದಲು ಅವರು ನುಡಿದ ಭವಿಷ್ಯ ಏನಾಗಿತ್ತು? ಇಲ್ಲಿದೆ ಮಾಹಿತಿ.

VISTARANEWS.COM


on

Yogendra Yadav
Koo

ನವದೆಹಲಿ: ಲೋಕಸಭೆ ಚುನಾವಣೆಯ (Lok Sabha Election 2024) ನಾಲ್ಕನೇ ಹಂತದ ಮತದಾನ ಮುಕ್ತಾಯವಾಗಿದೆ. ಬಿಜೆಪಿ, ಕಾಂಗ್ರೆಸ್‌ ಸೇರಿ ಎಲ್ಲ ಪಕ್ಷಗಳು, ಎಲ್ಲ ಮೈತ್ರಿಕೂಟಗಳು ಸೋಲು-ಗೆಲುವಿನ ಲೆಕ್ಕಾಚಾರ ಹಾಕುತ್ತಿವೆ. ಚುನಾವಣೆ ಪೂರ್ವ ಸಮೀಕ್ಷೆಗಳು, ಮತಗಟ್ಟೆಗಳಲ್ಲಿ ವ್ಯಕ್ತವಾದ ಅಭಿಪ್ರಾಯ, ಜನರ ಬೆಂಬಲ ಯಾರಿಗಿದೆ ಎಂಬುದರ ವಿಶ್ಲೇಷಣೆ ಮಾಡುತ್ತಿವೆ. ಆಂತರಿಕ ಸಮೀಕ್ಷೆಗಳು ನಡೆಯುತ್ತಿವೆ. ಇದರ ಬೆನ್ನಲ್ಲೇ, ಚುನಾವಣಾ ತಜ್ಞ, ರಾಜಕೀಯ ವಿಶ್ಲೇಷಕ ಯೋಗೇಂದ್ರ ಯಾದವ್‌ (Yogendra Yadav) ಅವರು ಚುನಾವಣೆ ಫಲಿತಾಂಶದ ಕುರಿತು ಭವಿಷ್ಯ ನುಡಿದಿದ್ದಾರೆ. ಅದರಲ್ಲೂ, ಈ ಬಾರಿ ಎನ್‌ಡಿಎ ಮೈತ್ರಿಕೂಟವು ಸ್ಪಷ್ಟ ಬಹುಮತ ಸಾಧಿಸಲ್ಲ ಎಂದು ಹೇಳಿದ್ದು, ರಾಜಕೀಯ ವಲಯದಲ್ಲಿ ಭಾರಿ ಚರ್ಚೆಯಾಗುತ್ತಿದೆ.

ಲೋಕಸಭೆ ಚುನಾವಣೆಯಲ್ಲಿ ಬಿಜೆಪಿ ನೇತೃತ್ವದ ಎನ್‌ಡಿಎ ಭವಿಷ್ಯ ಏನಾಗಲಿದೆ ಎಂಬುದರ ಕುರಿತು ವಿಶ್ಲೇಷಣೆ ಮಾಡಿದ ವಿಡಿಯೊವನ್ನು ಯೋಗೇಂದ್ರ ಯಾದವ್‌ ಅವರು ಪೋಸ್ಟ್‌ ಮಾಡಿದ್ದಾರೆ. “ಲೋಕಸಭೆ ಚುನಾವಣೆಯಲ್ಲಿ ಬಿಜೆಪಿಯು 233 ಕ್ಷೇತ್ರಗಳನ್ನು ಮಾತ್ರ ಗೆಲ್ಲಲಿದೆ. ಇದು 70 ಸೀಟುಗಳನ್ನು ಕಳೆದುಕೊಳ್ಳಲಿದೆ. ಇನ್ನು ಬಿಜೆಪಿ ಮೈತ್ರಿ ಪಕ್ಷಗಳು 35 ಕ್ಷೇತ್ರಗಳಲ್ಲಿ ಮಾತ್ರ ಗೆಲುವು ಸಾಧಿಸಲಿವೆ. ಅಲ್ಲಿಗೆ ಎನ್‌ಡಿಎ ಮ್ಯಾಜಿಕ್‌ ನಂಬರ್‌ ಸಮೀಪ ಬರುತ್ತದೆಯೇ ಹೊರತು, ಸ್ಪಷ್ಟ ಬಹುಮತ ಸಿಗುವುದಿಲ್ಲ. ಮಾಧ್ಯಮಗಳು ಹಾಗೂ ರಾಜಕೀಯ ವಿಶ್ಲೇಷಕರು ಅಜೆಂಡಾ ಇಟ್ಟುಕೊಂಡು ಬಿಜೆಪಿ ನೇತೃತ್ವದ ಸರ್ಕಾರವೇ ಅಧಿಕಾರಕ್ಕೆ ಬರಲಿದೆ ಎಂಬುದಾಗಿ ವರದಿ ನೀಡುತ್ತಿವೆ” ಎಂದು ಟಾಂಗ್‌ ಕೊಟ್ಟರು.

ಯಾವ ರಾಜ್ಯಗಳಲ್ಲಿ ಬಿಜೆಪಿಗೆ ಹಿನ್ನಡೆ?

ಯೋಗೇಂದ್ರ ಯಾದವ್‌ ಅವರ ವಿಶ್ಲೇಷಣೆ ಪ್ರಕಾರ, ಕರ್ನಾಟಕ ಸೇರಿ ಹಲವು ರಾಜ್ಯಗಳಲ್ಲಿ ಈ ಬಾರಿ ಬಿಜೆಪಿಗೆ ಹಿನ್ನಡೆಯಾಗಲಿದೆ. ಕರ್ನಾಟಕದಲ್ಲಿ ಬಿಜೆಪಿ 10 ಸ್ಥಾನಗಳನ್ನು ಕಳೆದುಕೊಳ್ಳಲಿದೆ. ಇನ್ನುಳಿದಂತೆ, ಮಹಾರಾಷ್ಟ್ರದಲ್ಲಿ 20, ರಾಜಸ್ಥಾನ ಹಾಗೂ ಗುಜರಾತ್‌ನಲ್ಲಿ ತಲಾ 10 ಕ್ಷೇತ್ರಗಳನ್ನು ಬಿಜೆಪಿ ಕಳೆದುಕೊಳ್ಳಲಿದೆ. ಇನ್ನು, ಹರಿಯಾಣ, ಪಂಜಾಬ್‌, ಹಿಮಾಚಲ ಪ್ರದೇಶ ಹಾಗೂ ದೆಹಲಿಯಲ್ಲಿ ಬಿಜೆಪಿ ನೇತೃತ್ವದ ಎನ್‌ಡಿಎ ಮೈತ್ರಿಕೂಟವು ತಲಾ 10 ಕ್ಷೇತ್ರಗಳನ್ನು ಕಳೆದುಕೊಳ್ಳಲಿದೆ. ಆ ಮೂಲಕ ಎನ್‌ಡಿಎ ಒಟ್ಟು 100 ಕ್ಷೇತ್ರಗಳನ್ನು ಕಳೆದುಕೊಳ್ಳಲಿದೆ ಎಂಬುದಾಗಿ ಅಂದಾಜಿಸಿದ್ದಾರೆ. ಚುನಾವಣೆ ಪೂರ್ವದಲ್ಲಿ ಕೈಗೊಂಡ ಬಹುತೇಕ ಸಮೀಕ್ಷೆಗಳಲ್ಲಿ ಎನ್‌ಡಿಎ ಮೈತ್ರಿಕೂಟವೇ ಅಧಿಕಾರಕ್ಕೆ ಬರಲಿದೆ ಎಂದು ತಿಳಿದುಬಂದಿದೆ. ಇದರ ಬೆನ್ನಲ್ಲೇ, ಯೋಗೇಂದ್ರ ಯಾದವ್‌ ಅವರು ಫಲಿತಾಂಶದ ಕುರಿತು ವಿಶ್ಲೇಷಣೆ ಮಾಡಿರುವುದು ಚರ್ಚೆಗೆ ಗ್ರಾಸವಾಗಿದೆ.

2019ರಲ್ಲಿ ನುಡಿದ ಭವಿಷ್ಯ ಏನಾಗಿತ್ತು?

2019ರ ಸಾರ್ವತ್ರಿಕ ಚುನಾವಣೆ ಫಲಿತಾಂಶದ ಕುರಿತು 2018ರಲ್ಲಿಯೇ ಯೋಗೇಂದ್ರ ಯಾದವ್‌ ಅವರು ವಿಶ್ಲೇಷಣೆ ಮಾಡಿದ್ದರು. ಬಿಜೆಪಿ ನೇತೃತ್ವದ ಎನ್‌ಡಿಎ ಚುನಾವಣೆಯಲ್ಲಿ 100 ಸೀಟುಗಳನ್ನು ಕಳೆದುಕೊಳ್ಳಲಿದೆ. ಬಿಜೆಪಿಯೊಂದೇ 65 ಕ್ಷೇತ್ರಗಳನ್ನು ಕಳೆದುಕೊಳ್ಳಲಿದೆ. ಆ ಮೂಲಕ ಎನ್‌ಡಿಎ ಬಹುಮತ ಸಾಬೀತುಪಡಿಸುವುದಿಲ್ಲ ಎಂದೇ ಹೇಳಿದ್ದರು. ಇನ್ನು, 2019ರಲ್ಲಿ ಲೇಖನ ಬರೆದಿದ್ದ ಯೋಗೇಂದ್ರ ಯಾದವ್‌, 2004ರ ಲೋಕಸಭೆ ಚುನಾವಣೆ ಫಲಿತಾಂಶವೇ ಮರುಕಳಿಸಲಿದೆ. ಆಗಲೂ ವಾಜಪೇಯಿ ಅವರ ಸರ್ಕಾರವೇ ಮತ್ತೆ ಅಧಿಕಾರಕ್ಕೆ ಬರುತ್ತದೆ ಎನ್ನಲಾಗುತ್ತಿತ್ತು. ಆದರೆ, ಫಲಿತಾಂಶ ಉಲ್ಟಾ ಆಯಿತು. 2019ರ ಚುನಾವಣೆಯಲ್ಲೂ ಇದೇ ರೀತಿ ಆಗಲಿದೆ ಎಂದು ಲೇಖನದಲ್ಲಿ ಉಲ್ಲೇಖಿಸಿದ್ದರು. ಆದರೆ, ಚುನಾವಣೆ ಫಲಿತಾಂಶದ ಬಳಿಕ ಎಲ್ಲವೂ ಉಲ್ಟಾ ಆಗಿತ್ತು. ಎನ್‌ಡಿಎ ಮೈತ್ರಿಕೂಟವು 353 ಕ್ಷೇತ್ರಗಳಲ್ಲಿ ಗೆಲುವು ಸಾಧಿಸಿತ್ತು. ಬಿಜೆಪಿಯೊಂದೇ 303 ಕ್ಷೇತ್ರಗಳಲ್ಲಿ ಗೆದ್ದು ಬೀಗಿತ್ತು. ರೈತ ಚಳವಳಿ ಹಿನ್ನೆಲೆಯಲ್ಲಿ ಉತ್ತರ ಪ್ರದೇಶ ವಿಧಾನಸಭೆ ಚುನಾವಣೆಯಲ್ಲಿ ಬಿಜೆಪಿಗೆ ಸೋಲಾಗುತ್ತದೆ ಎಂದು ಇವರು ಭವಿಷ್ಯ ನುಡಿದಿದ್ದರು. ಆದರೆ ಅಲ್ಲಿ ಯೋಗಿ ಆದಿತ್ಯನಾಥ್‌ ನೇತೃತ್ವದಲ್ಲಿ ಬಿಜೆಪಿ ಸತತ ಎರಡನೇ ಬಾರಿ ಭಾರಿ ಬಹುಮತದ ಗೆಲುವು ಸಾಧಿಸಿತ್ತು.

ಇದನ್ನೂ ಓದಿ: Sita Temple: ಬಿಜೆಪಿಯಿಂದ ಶೀಘ್ರವೇ ಸೀತೆಗಾಗಿ ಮಂದಿರ ನಿರ್ಮಾಣ; ಅಮಿತ್‌ ಶಾ ಮಹತ್ವದ ಘೋಷಣೆ

Continue Reading

ಕರ್ನಾಟಕ

HD Revanna Case: ಹೊಳೆನರಸೀಪುರದ ಲೈಂಗಿಕ ದೌರ್ಜನ್ಯ ಕೇಸ್‌ನಲ್ಲಿ ರೇವಣ್ಣಗೆ ಮಧ್ಯಂತರ ಜಾಮೀನು; ಆದರೂ ಮುಗಿದಿಲ್ಲ ಟೆನ್ಶನ್‌!

HD Revanna Case: ಎಚ್‌.ಡಿ. ರೇವಣ್ಣ ಅವರು ಇಂದು ಬೆಳಗ್ಗಿನಿಂದ ಟೆಂಪಲ್ ರನ್‌ ನಡೆಸಿದರು. ಬಳಿಕ ಇನ್ನೊಂದು ಪ್ರಕರಣದಲ್ಲಿ ಸಲ್ಲಿಸಿರುವ ಜಾಮೀನು ಅರ್ಜಿ ವಿಚಾರಣೆಗಾಗಿ ನ್ಯಾಯಾಲಯದ ಮುಂದೆ ಹಾಜರಾದರು. ಈಗಾಗಲೇ ಮೈಸೂರಿನ ಸಂತ್ರಸ್ತೆಯ ಕಿಡ್ನ್ಯಾಪ್‌ (kidnap case) ಪ್ರಕರಣದಲ್ಲಿ ಅವರು ಜಾಮೀನು ಪಡೆದಿದ್ದಾರೆ. ಈಗ ಹೊಳೆನರಸೀಪುರದ ಪ್ರಕರಣದಲ್ಲಿ ಮಧ್ಯಂತರ ಜಾಮೀನು ಸಿಕ್ಕಿದ್ದು, ಶುಕ್ರವಾರದ ಆದೇಶದ ಮೇಲೆ ಎಲ್ಲವೂ ನಿಂತಿದೆ. ನಾಳೆ ಕೋರ್ಟ್‌ ಯಾವ ನಿರ್ಧಾರವನ್ನು ಪ್ರಕಟಿಸಲಿದೆ ಎಂಬುದರ ಮೇಲೆ ಜೈಲಾ? ಎಸ್‌ಐಟಿ ವಶವೇ? ಅಥವಾ ಜಾಮೀನಾ ಎಂಬುದು ನಿರ್ಧಾರ ಆಗಲಿದೆ.

VISTARANEWS.COM


on

HD Revanna case Revanna gets interim bail in Holenarasipura sexual assault case
Koo

ಬೆಂಗಳೂರು: ಹೊಳೆನರಸೀಪುರದ ಲೈಂಗಿಕ ದೌರ್ಜನ್ಯ (Physical Abuse) ಪ್ರಕರಣದಲ್ಲಿ ಮಾಜಿ ಸಚಿವ ಎಚ್‌.ಡಿ ರೇವಣ್ಣ (HD Revanna Case) ಅವರಿಗೆ ಮಧ್ಯಂತರ ಜಾಮೀನು (Bail) ನೀಡಲಾಗಿದ್ದು, ಶುಕ್ರವಾರಕ್ಕೆ (ಮೇ 17) ವಿಚಾರಣೆಯನ್ನು ಮುಂದೂಡಲಾಗಿದೆ. ಹೀಗಾಗಿ ರೇವಣ್ಣ ಅವರು ಇನ್ನೂ ನಿಟ್ಟುಸಿರು ಬಿಡುವಂತೆ ಇಲ್ಲ. ನಾಳೆ ಕೋರ್ಟ್‌ ಯಾವ ನಿರ್ಧಾರವನ್ನು ಪ್ರಕಟಿಸಲಿದೆ ಎಂಬುದರ ಮೇಲೆ ಜೈಲಾ? ಎಸ್‌ಐಟಿ ವಶವೇ? ಅಥವಾ ಜಾಮೀನಾ ಎಂಬುದು ನಿರ್ಧಾರ ಆಗಲಿದೆ.

ಎಚ್‌.ಡಿ. ರೇವಣ್ಣ ಅವರು ಇಂದು ಬೆಳಗ್ಗಿನಿಂದ ಟೆಂಪಲ್ ರನ್‌ ನಡೆಸಿದರು. ಬಳಿಕ ಇನ್ನೊಂದು ಪ್ರಕರಣದಲ್ಲಿ ಸಲ್ಲಿಸಿರುವ ಜಾಮೀನು ಅರ್ಜಿ ವಿಚಾರಣೆಗಾಗಿ ನ್ಯಾಯಾಲಯದ ಮುಂದೆ ಹಾಜರಾದರು. ಈಗಾಗಲೇ ಮೈಸೂರಿನ ಸಂತ್ರಸ್ತೆಯ ಕಿಡ್ನ್ಯಾಪ್‌ (kidnap case) ಪ್ರಕರಣದಲ್ಲಿ ಅವರು ಜಾಮೀನು ಪಡೆದಿದ್ದಾರೆ. ಈಗ ಹೊಳೆನರಸೀಪುರದ ಪ್ರಕರಣದಲ್ಲಿ ಮಧ್ಯಂತರ ಜಾಮೀನು ಸಿಕ್ಕಿದ್ದು, ಶುಕ್ರವಾರದ ಆದೇಶದ ಮೇಲೆ ಎಲ್ಲವೂ ನಿಂತಿದೆ. ಈಗ ಐದು ಲಕ್ಷ ರೂಪಾಯಿ ಬಾಂಡ್ ಹಾಗೂ ಒಬ್ಬರ ಶ್ಯೂರಿಟಿ ನೀಡುವಂತೆ ಕೋರ್ಟ್‌ ಸೂಚನೆ ನೀಡಿದೆ.

ವಾದ – ಪ್ರತಿವಾದ

ಗುರುವಾರ (ಮೇ 16) ಬೆಳಗ್ಗೆ 42ನೇ ಎಸಿಎಂಎಂ ಕೋರ್ಟ್‌ನಲ್ಲಿ ಜಾಮೀನು ಅರ್ಜಿ ವಿಚಾರಣೆಯನ್ನು ಕೈಗೆತ್ತಿಕೊಂಡ ನ್ಯಾಯಾಲಯವು ಎಚ್.ಡಿ. ರೇವಣ್ಣ ಪರ ವಕೀಲರ ವಾದವನ್ನು ಆಲಿಸಿದರು. ಬಳಿಕ ಎಸ್ಐಟಿ ಪರ ವಕೀಲರಿಗೆ ಆಕ್ಷೇಪಣೆ ಸಲ್ಲಿಸಲು‌ ಸೂಚಿಸಿದ ನ್ಯಾಯಾಧೀಶೆ ಪ್ರೀತ್ ಜೆ. ವಿಚಾರಣೆಯನ್ನು ಕೆಲ ಕಾಲ ಮುಂದೂಡಿದ್ದರು.

ಜಾಮೀನು ನೀಡದಂತೆ ಜಯ್ನಾ ಕೊಠಾರಿ ಮನವಿ

ಈ ವೇಳೆ ಎಸ್‌ಐಟಿ ಪರ ವಾದ ಮಂಡಿಸಿದ ಎಸ್‌ಪಿಪಿ ಜಯ್ನಾ ಕೊಠಾರಿ, ಎಚ್.‌ ಡಿ. ರೇವಣ್ಣ ಅವರಿಗೆ ಯಾವುದೇ ಕಾರಣಕ್ಕೂ ಜಾಮೀನು ನೀಡಬಾರದು ಎಂದು ಮನವಿ ಮಾಡಿದರು. ಇದಕ್ಕೆ ಆಕ್ಷೇಪ ವ್ಯಕ್ತಪಡಿಸಿದ ರೇವಣ್ಣ ಪರ ವಕೀಲ, ಈ ಕೇಸ್‌ನಲ್ಲಿ ನಾನ್ ಬೇಲಬಲ್‌ ಸೆಕ್ಷನ್ ಇಲ್ಲ. ಹೀಗಾಗಿ ಜಾಮೀನು ನೀಡಬೇಕು ಎಂದು ಮನವಿ ಮಾಡಿದರು.

ಆಗ ಮಧ್ಯಪ್ರವೇಶ ಮಾಡಿದ ಜಡ್ಜ್‌, ಎಸ್ಐಟಿ ವಾದಕ್ಕೂ ಅವಕಾಶ ನೀಡೋಣ ಎಂದು ಹೇಳಿ ಆಕ್ಷೇಪಣೆ ಸಲ್ಲಿಸಲು ಎಸ್‌ಐಟಿ ಪರ ವಕೀಲರಿಗೆ ಸೂಚಿಸಿದರು.

ಮಧ್ಯಾಹ್ನದ ಬಳಿಕ ವಿಚಾರಣೆ ಆರಂಭವಾಗುತ್ತಿದ್ದಂತೆ, ಎಸ್‌ಪಿಪಿ ಜಯ್ನಾ ಕೊಠಾರಿ ವಾದ ಮಂಡನೆ ಆರಂಭಿಸಿದರು. ಈ ವೇಲೆ ಎಚ್.ಡಿ. ರೇವಣ್ಣ ಪರ ವಕೀಲರು ಮಧ್ಯ ಪ್ರವೇಶ ಮಾಡಿ, ಸೀನಿಯರ್ ವಕೀಲರು ಬರ್ತಾರೆ. ಹೀಗಾಗಿ ನಾಳೆಯವರೆಗೂ (ಮೇ 17) ಸಮಯ ನೀಡಬೇಕು ಎಂದು ಮನವಿ ಮಾಡಿದರು. ಇದಕ್ಕೆ ಜಯ್ನಾ ಕೊಠಾರಿ ಆಕ್ಷೇಪ ವ್ಯಕ್ತಪಡಿಸಿ, ಹೊಳೆನರಸೀಪುರ ಕೇಸಲ್ಲಿ ವಿಚಾರಣೆಗೆ ಬರುವುದಾಗಿ ಹೇಳಿದ್ದಾರೆ. ಇನ್ನೂ ವಿಚಾರಣೆಗೆ ಬಂದಿಲ್ಲ. ಈಗಲೇ ವಿಚಾರಣೆ ನಡೆಯಲಿ. ಅಥವಾ ಆರೋಪಿ ರೇವಣ್ಣ ಅವರನ್ನು ಪೊಲೀಸರ ವಶಕ್ಕೆ ನೀಡಬೇಕು. ಇದೇ ಪ್ರಕರಣ ಆರೋಪಿ ವಿಚಾರಣೆಗೆ ಹಾಜರಾಗಿಲ್ಲ. ಮತ್ತೊಬ್ಬ ಆರೋಪಿ ದೇಶ ಬಿಟ್ಟು ಹೋಗಿದ್ದಾರೆ. ಹೀಗಾಗಿ ಸಮಯ ನೀಡಬಾರದು. ಇಂದೇ ವಿಚಾರಣೆ ನಡೆಸಿ ಆದೇಶ ನೀಡಿ ಅಥವಾ ಪೊಲೀಸರ ವಶಕ್ಕೆ ನೀಡಬೇಕು ಎಂದು ವಾದಿಸಿದರು.

ಇದಕ್ಕೆ ಪ್ರತಿವಾದ ಮಂಡಿಸಿದ ರೇವಣ್ಣ ಪರ ವಕೀಲ ಅರುಣ್, ಎಚ್.ಡಿ. ರೇವಣ್ಣ ವಿರುದ್ಧ ಯಾವುದೇ ನಾನ್ ಬೇಲೆಬಲ್ ಸೆಕ್ಷನ್ ಇಲ್ಲ. ಜಾಮೀನು ನೀಡುವಂತಹ ಸೆಕ್ಷನ್‌ಗಳು ಇವೆ ಎಂದು ಹೇಳಿದರು. ಅದಕ್ಕೆ ಆಕ್ಷೇಪ ವ್ಯಕ್ತಪಡಿಸಿದ ಎಸ್‌ಪಿಪಿ ಜಯ್ನಾ ಕೋಠಾರಿ, ಆರೋಪಿಯು ಪೊಲೀಸರ ಮುಂದೆ ಶರಣಾಗಲಿ ಅಥವಾ ಜಾಮೀನು ಅರ್ಜಿ ವಿಚಾರಣೆ ನಡೆಯಲಿ. ಆರೋಪಿ ತುಂಬಾ ಪ್ರಭಾವಿ ಆಗಿದ್ದಾರೆ. ಹೀಗಾಗಿ ಆರೋಪಿಯೇ ಸ್ವ – ಇಚ್ಛೆಯಿಂದ ಬಂದು ಶರಣಾಗಲಿ ಎಂದು ವಾದಿಸಿದರು.

ಆಗ ಪ್ರತಿವಾದ ಮಂಡಿಸಿದ ರೇವಣ್ಣ ಪರ ವಕೀಲ ಅರುಣ್‌, ನಾನ್ ಬೇಲೆಬಲ್ ಸೆಕ್ಷನ್ ಪ್ರಕರಣದಲ್ಲಿ ಸರ್ಕಾರದ ಪರ ವಕೀಲರಿಗೆ ಆಕ್ಷೇಪಣೆ ಸಲ್ಲಿಸುವ ಅಧಿಕಾರವೇ ಇಲ್ಲ. ಎಸ್‌ಪಿಪಿಗೆ ಆಕ್ಷೇಪಣೆ ಸಲ್ಲಿಸುವ ಅಧಿಕಾರ ಇದೆಯೇ ಎಂಬುದು ಮೊದಲು ನಿರ್ಧಾರ ಆಗಲಿ. ಇನ್ನು ಈಗಾಗಲೇ ಎಚ್.ಡಿ. ರೇವಣ್ಣ ಅವರನ್ನು ಬಂಧಿಸಲಾಗಿತ್ತು. ಆಗಲೇ ಈ ಪ್ರಕರಣದ ಬಗ್ಗೆ ವಿಚಾರಣೆ ನಡೆಸಬಹುದಿತ್ತು. ಈಗ ಎಸ್ಐಟಿ ಕಸ್ಟಡಿಗೆ ಕೇಳುತ್ತಿರುವುದು ಸರಿಯಲ್ಲ ಎಂದು ಹೇಳಿದರು.

ಇದನ್ನೂ ಓದಿ: Prajwal Revanna Case: ಹಾಸನ, ಬೆಂಗಳೂರು ದಾಳಿ ವೇಳೆ ಸಿಕ್ಕ ಪೆನ್‌ಡ್ರೈವ್‌, ಹಾರ್ಡ್‌ ಡಿಸ್ಕ್‌ ಎಷ್ಟು? ಎಫ್‌ಎಸ್‌ಎಲ್‌ಗೆ ರವಾನೆ

ರೇವಣ್ಣ ಹಾಜರಾಗಲು ಜಡ್ಜ್‌ ಸೂಚನೆ

ಪುನಃ ವಾದ ಮಂಡಿಸಿದ ಜಯ್ನಾ ಕೊಠಾರಿ, ಆರೋಪಿ ಬೆಳಗ್ಗೆ ಶರಣಾಗಿ ಅರ್ಜಿ ಸಲ್ಲಿಸಿದ್ದಾರೆ. ಆದರೆ, ಈಗ ಕೋರ್ಟ್‌ಗೆ ಶರಣಾಗಲು ಸಿದ್ಧರಿಲ್ಲ. ಸದ್ಯ ಇಲ್ಲೇ ಎಲ್ಲಿಯೋ ಕಾರಿನಲ್ಲಿ ಕುಳಿತಿರಬಹುದು ಎಂದು ಹೇಳಿದರು. ಈ ವೇಳೆ ರೇವಣ್ಣ ನ್ಯಾಯಾಲಯಕ್ಕೆ ಹಾಜರಾಗಬೇಕು ಎಂದು ಸೂಚಿಸಿ ವಿಚಾರಣೆಯನ್ನು ಮುಂದೂಡಿಕೆ ಮಾಡಿದರು. ಬಳಿಕ ವಿಚಾರಣೆ ಆರಂಭವಾಗುತ್ತಿದ್ದಂತೆ ಎಚ್‌.ಡಿ. ರೇವಣ್ಣ ನ್ಯಾಯಾಲಯಕ್ಕೆ ಹಾಜರಾಗಿದ್ದರು.

ರೇವಣ್ಣ ಟೆಂಪಲ್‌ ರನ್‌ ಹೀಗಿತ್ತು

ಇಂದು ಮುಂಜಾನೆ ತಾವು ಉಳಿದುಕೊಂಡಿದ್ದ ದೇವೇಗೌಡರ ಮನೆಯಿಂದ ಹೊರಟ ರೇವಣ್ಣ ಅವರು ವೈದ್ಯ ಸಿಎನ್ ಮಂಜುನಾಥ್ ಅವರ ನಿವಾಸಕ್ಕೆ ಬಂದು, ಅಲ್ಲಿಂದ ಟೆಂಪಲ್ ರನ್ ಶುರು ಮಾಡಿದರು. ಬೆಳಗ್ಗೆ 8:26ಕ್ಕೆ ಜಯನಗರ ಶ್ರೀ ಸಿದ್ಧಿ ವಿನಾಯಕ ಸ್ವಾಮಿ ದೇವಸ್ಥಾನ, 8:50ಕ್ಕೆ ಗವಿಗಂಗಾಧರೇಶ್ವರ ದೇವಸ್ಥಾನ, 9:10ಕ್ಕೆ ಶ್ರೀ ಶೃಂಗೇರಿ ಶಂಕರ ಮಠ, 10:31ಕ್ಕೆ ಬಸವನಗುಡಿಯ ಕಾರಂಜಿ ಆಂಜನೇಯಸ್ವಾಮಿ ದೇವಸ್ಥಾನಗಳಿಗೆ ಭೇಟಿ ನೀಡಿ ನಂತರ ಕೋರ್ಟ್‌ಗೆ ಹಾಜರಾದರು.

Continue Reading

ದೇಶ

PM Narendra Modi:”ಅಬ್ಬಾ.. ಎಂಥಾ ಮೇಕಪ್!”- ಮತ್ತೆ ಗಮನ ಸೆಳೆದ ಮೋದಿ; ವಿಡಿಯೋ ವೈರಲ್‌

PM Narendra Modi: ಜೌನ್‌ಪುರದಲ್ಲಿ ನಡೆದ ಸಾರ್ವಜನಿಕ ಸಭೆಯನ್ನುದ್ದೇಶಿಸಿ ಭಾಷಣ ಮಾಡುತ್ತಿದ್ದಾಗ ಸಭೆಯಲ್ಲಿದ್ದ ಮೋದಿ ಹಾಗೂ ಉತ್ತರಪ್ರದೇಶ ಸಿಎಂ ಯೋಗಿ ಆದಿತ್ಯಾನಾಥ್‌ ಅವರ ವೇಷ ತೊಟ್ಟಿದ್ದ ಇಬ್ಬರು ಬಾಲಕರನ್ನು ಗುರುತಿಸಿದ ಪ್ರಧಾನಿ ನರೇಂದ್ರ ಮೋದಿ, ʼʼಯೇ ಕ್ಯಾ ಬಡಿಯಾ ಮೇಕ್‌ ಅಪ್‌ ಕಿಯಾ ಹೇ(ಅಬ್ಬಾ ಎಂಥಾ ಮೇಕಪ್‌ ಮಾಡಿದ್ದೀರಿ)” ಎಂದು ಮೆಚ್ಚುಗೆ ವ್ಯಕ್ತಪಡಿಸುವ ಮೂಲಕ ಗಮನ ಸೆಳೆದಿದ್ದಾರೆ.

VISTARANEWS.COM


on

PM Narendra Modi
Koo

ಉತ್ತರಪ್ರದೇಶ: ಪ್ರಧಾನಿ ನರೇಂದ್ರ ಮೋದಿ(PM Narendra Modi) ತಮ್ಮ ಚುನಾವಣಾ ಪ್ರಚಾರ(Lok Sabha Elction 2024)ದ ವೇಳೆ, ರ್ಯಾಲಿಗಳಲ್ಲಿ ಅದೆಷ್ಟು ಅಬ್ಬರದ ಭಾಷಣದಲ್ಲಿ ತೊಡಗಿದ್ದರೂ ಎದುರಿಗೆ ನೆರೆದಿರುವ ಜನರ ಮೇಲೆ ಪ್ರತ್ಯೇಕ ಗಮನ ಇದ್ದೇ ಇರುತ್ತದೆ. ಕೆಲವೊಮ್ಮೆ ಸಭಿಕರ ನಡುವೆ ಏನಾದರೂ ವಿಚಾರಗಳು ಕಂಡು ಬಂದಲ್ಲಿ ತಕ್ಷಣ ಅಲ್ಲೇ ಅದಕ್ಕೆ ಪ್ರತಿಕ್ರಿಯಿಸಿ ಗಮನ ಸೆಳೆದದ್ದೂ ಇದೆ. ಇದೀಗ ಮತ್ತೆ ಅಂತಹದ್ದೇ ಒಂದು ಘಟನೆ ಉತ್ತರಪ್ರದೇಶದಲ್ಲಿ ನಡೆದಿದೆ.

ಜೌನ್‌ಪುರದಲ್ಲಿ ನಡೆದ ಸಾರ್ವಜನಿಕ ಸಭೆಯನ್ನುದ್ದೇಶಿಸಿ ಭಾಷಣ ಮಾಡುತ್ತಿದ್ದಾಗ ಸಭೆಯಲ್ಲಿದ್ದ ಮೋದಿ ಹಾಗೂ ಉತ್ತರಪ್ರದೇಶ ಸಿಎಂ ಯೋಗಿ ಆದಿತ್ಯಾನಾಥ್‌ ಅವರ ವೇಷ ತೊಟ್ಟಿದ್ದ ಇಬ್ಬರು ಬಾಲಕರನ್ನು ಗುರುತಿಸಿದ ಪ್ರಧಾನಿ ನರೇಂದ್ರ ಮೋದಿ, ʼʼಯೇ ಕ್ಯಾ ಬಡಿಯಾ ಮೇಕ್‌ ಅಪ್‌ ಕಿಯಾ ಹೇ(ಅಬ್ಬಾ ಎಂಥಾ ಮೇಕಪ್‌ ಮಾಡಿದ್ದೀರಿ)” ಎಂದು ಮೆಚ್ಚುಗೆ ವ್ಯಕ್ತಪಡಿಸುವ ಮೂಲಕ ಗಮನ ಸೆಳೆದಿದ್ದಾರೆ.

ಬಿಜೆಪಿ ಅಭ್ಯರ್ಥಿಗಳಾದ ಕೃಪಾ ಶಂಕರ್‌ ಸಿಂಗ್‌ ಮತ್ತು ಬಿಪಿ ಸರೋಜ್‌ ಪರ ಪ್ರಚಾರ ಕಾರ್ಯದಲ್ಲಿ ಭಾಗಿಯಾಗಿ ಮಾತನಾಡಿದ ಅವರು, ಮುಂದಿನ ಐದು ವರ್ಷಗಳಲ್ಲಿ ಸಿಎಂ ಯೋಗಿ ಅವರ ಸಹಕಾರದೊಂದಿಗೆ ಇದೀ ಪೂರ್ವಾಂಚಲ ಪ್ರದೇಶದಲ್ಲಿ ಬದಲಾವಣೆ ಗಾಳಿ ಬೀಸಲಿದೆ ಎಂದು ವಿಶ್ವಾಸ ವ್ಯಕ್ತಪಡಿಸಿದೆ. ಈ ವೇಳೆ ಅವರು ಸಭೆಯ ನಡುವೆ ವಿಶೇಷ ಉಡುಗೆ ತೊಡುಗೆಯಲ್ಲಿ ಮಿಂಚುತ್ತಿದ್ದ ಇಬ್ಬರು ಬಾಲಕರನ್ನು ಗಮನಿಸಿ ಪ್ರಧಾನಿ ಮೆಚ್ಚುಗೆ ವ್ಯಕ್ತಪಡಿಸಿದ್ದಾರೆ.

ಕಾನೂನು ಸುವ್ಯವಸ್ಥೆ ಜಾರಿ ಕುರಿತು ಉತ್ತರ ಪ್ರದೇಶ ಮುಖ್ಯಮಂತ್ರಿಯನ್ನು ಶ್ಲಾಘಿಸಿದ ಮೋದಿ, “ನೀವು ಸಮಾಜವಾದಿ ಪಾರ್ಟಿಯ ʼಗೂಂಡಾರಾಜ್’ನ ಹಳೆಯ ದಿನಗಳನ್ನು ನೋಡಿದ್ದೀರಿ. ಯೋಗಿಜಿ ನನ್ನ ʼಸ್ವಚ್ಛತಾ ಅಭಿಯಾನ’ವನ್ನು ಸರಿಯಾಗಿ ಜಾರಿಗೆ ತಂದಿದ್ದಾರೆ. ಉತ್ತರ ಪ್ರದೇಶದಲ್ಲಿ ಇದ್ದ ಗ್ಯಾಂಗ್‌ಗಳು, ಗಲಭೆಕೋರರು, ಮಾಫಿಯಾಗಳು, ಅಪಹರಣಕಾರರು ಮತ್ತು ಸುಲಿಗೆಕೋರರ ವಿರುದ್ಧ ಕಠಿಣ ಕ್ರಮ ಜರುಗಿಸಿದ್ದಾರೆ” ಎಂದಿದ್ದಾರೆ.

“ಹತ್ತು ವರ್ಷಗಳ ಹಿಂದೆ ಇಲ್ಲಿ ಜನರು ದೇವರ ಭರವಸೆಯಲ್ಲಿ ಬದುಕುತ್ತಿದ್ದರು. ಕೆಲವು ಕಡೆ ಬಾಂಬ್ ದಾಳಿ, ಕೆಲವು ಕಡೆ ಸ್ಲೀಪರ್ ಸೆಲ್, ಕೆಲವು ಕಡೆ ಕೋಮು ಘರ್ಷಣೆ, ಇನ್ನು ಕೆಲವು ಕಡೆ ಭಯೋತ್ಪಾದನೆಯಿಂದ ಸಂಕಷ್ಟ ಪರಿಸ್ಥಿತಿ ಇತ್ತು. ಸಾವಿರಾರು ತಾಯಂದಿರು ತಮ್ಮ ಮಕ್ಕಳನ್ನು ಕಳೆದುಕೊಂಡರು. ಈ ಹಿಂದಿನ ಸರ್ಕಾರಗಳು ಅಂತಹ ದುಷ್ಟರಿಗೆ ಸಹಕಾರ ನೀಡುತ್ತಿದ್ದವು” ಎಂದರು ಮೋದಿ.

“ಈಗಲೂ ನಿಮ್ಮ ಮೀಸಲಾತಿಯನ್ನು ಕಿತ್ತು ಸಮುದಾಯವೊಂದಕ್ಕೆ ನೀಡಲು ಆ ಪಕ್ಷಗಳು ಚಿಂತಿಸಿವೆ. ಬಜೆಟ್ 15% ಅಲ್ಪಸಂಖ್ಯಾತರ ಹೆಸರಿನಲ್ಲಿ ಹೋಗುತ್ತಿದೆ. 70 ವರ್ಷಗಳಿಂದ ಹಿಂದೂ ಮುಸ್ಲಿಂ ರಾಜಕೀಯ ಮಾಡಿವೆ. ನಾವು ಒಂದಾಗಿ ಹೋಗಬೇಕು, ದೇಶವನ್ನು ಅಭಿವೃದ್ಧಿಯತ್ತ ಕೊಂಡೊಯ್ಯಬೇಕು” ಎಂದರು ನುಡಿದರು.

ಇದನ್ನೂ ಓದಿ:Lok Sabha Election 2024: ನಾಲ್ಕು ಹಂತಗಳ ಮತದಾನ ಅಂತ್ಯ; ಕಾಂಗ್ರೆಸ್ ಆಂತರಿಕ ವರದಿಯಲ್ಲೇನಿದೆ?

“ಸಿಎಎ ಅಡಿಯಲ್ಲಿ ನಿರಾಶ್ರಿತರಿಗೆ ಪೌರತ್ವ ನೀಡುವ ಕೆಲಸ ಈಗಾಗಲೇ ಪ್ರಾರಂಭವಾಗಿದೆ. ಇವರು ದೇಶದಲ್ಲಿ ನಿರಾಶ್ರಿತರಾಗಿ ದೀರ್ಘಕಾಲ ವಾಸಿಸಿದ್ದಾರೆ. ಇವರು ಧರ್ಮದ ಆಧಾರದ ಮೇಲೆ ಮಾಡಿದ ದೇಶ ವಿಭಜನೆಗೆ ಬಲಿಯಾದವರು. ಆದರೆ ವಿರೋಧ ಪಕ್ಷಗಳಾದ ಎಸ್‌ಪಿ ಮತ್ತು ಕಾಂಗ್ರೆಸ್ ಕಾನೂನಿನ ಬಗ್ಗೆ ತಪ್ಪು ಮಾಹಿತಿಯನ್ನು ಹರಡುವ ಮೂಲಕ ಗಲಭೆಗಳನ್ನು ಪ್ರಚೋದಿಸುತ್ತಿವೆ. ಈ ನಿರಾಶ್ರಿತರನ್ನು ಕಾಂಗ್ರೆಸ್ ನಿರ್ಲಕ್ಷಿಸಿದೆ. ಅವರು ಉತ್ತರ ಪ್ರದೇಶ ಮತ್ತು ಇಡೀ ದೇಶದಲ್ಲಿ ಗಲಭೆಯನ್ನು ಸೃಷ್ಟಿಸಲು ಪ್ರಯತ್ನಿಸಿದರು” ಎಂದು ಮೋದಿ ಆರೋಪಿಸಿದರು.

Continue Reading

ಕ್ರೈಂ

Prajwal Revanna Case: ಹಾಸನ, ಬೆಂಗಳೂರು ದಾಳಿ ವೇಳೆ ಸಿಕ್ಕ ಪೆನ್‌ಡ್ರೈವ್‌, ಹಾರ್ಡ್‌ ಡಿಸ್ಕ್‌ ಎಷ್ಟು? ಎಫ್‌ಎಸ್‌ಎಲ್‌ಗೆ ರವಾನೆ

Prajwal Revanna Case: ಪ್ರಜ್ವಲ್‌ ರೇವಣ್ಣ ಕೇಸ್‌ಗೆ ಸಂಬಂಧಪಟ್ಟಂತೆ ಮಾಜಿ ಶಾಸಕ ಪ್ರೀತಂ ಗೌಡ ಆಪ್ತರು ಹಾಗೂ ಬಂಧಿತರಾಗಿರುವ ಇಬ್ಬರಿಗೆ ಸೇರಿದ ಹಾಸನ ಮತ್ತು ಬೆಂಗಳೂರಿನ ಕೆಲವು ಸ್ಥಳಗಳಲ್ಲಿ ದಾಳಿ ನಡೆಸಿದ್ದ ಎಸ್ಐಟಿ ಹತ್ತು ಪೆನ್ ಡ್ರೈವ್ ಮತ್ತು ಒಂದು ಹಾರ್ಡ್ ಡಿಸ್ಕ್ ಅನ್ನು ವಶಕ್ಕೆ ತೆಗೆದುಕೊಂಡಿದೆ. ಇವುಗಳನ್ನು ಎಫ್‌ಎಸ್‌ಎಲ್‌ ವರದಿಗಾಗಿ ಕಳುಹಿಸಲಾಗಿದೆ. ಅಲ್ಲಿಂದ ವರದಿ ಬಂದ ಬಳಿಕ ಮುಂದಿನ ತೀರ್ಮಾನವನ್ನು ತೆಗೆದುಕೊಳ್ಳಲು ಎಸ್‌ಐಟಿ ನಿರ್ಧರಿಸಿದೆ. ಇದು ಮೂಲ ಕಾಪಿಯೇ? ಅಥವಾ ಒಬ್ಬರಿಂದ ಒಬ್ಬರಿಗೆ ಹಂಚಿಕೆ ಆಗಿರುವುದೇ ಎಂಬ ನಿಟ್ಟಿನಲ್ಲಿ ಎಫ್‌ಎಸ್‌ಎಲ್‌ನಲ್ಲಿ ಪರಿಶಿಲನೆ ನಡೆಸಲಾಗುತ್ತದೆ.

VISTARANEWS.COM


on

Prajwal Revanna Case pen drive and hard disk were found during the raids in Hassan and Bengaluru
Koo

ಬೆಂಗಳೂರು: ಪ್ರಜ್ವಲ್‌ ರೇವಣ್ಣ (Prajwal Revanna Case) ಅವರದ್ದು ಎನ್ನಲಾದ ಅಶ್ಲೀಲ ವಿಡಿಯೊ (Absence video) ಪ್ರಕರಣಕ್ಕೆ ಸಂಬಂಧಿಸಿದಂತೆ ಹಾಸನ ಹಾಗೂ ಬೆಂಗಳೂರಿನ ಹಲವು ಕಡೆ ಎಸ್ಐಟಿ ದಾಳಿ ನಡೆಸಿದ್ದ ವೇಳೆ ಹತ್ತು ಪೆನ್ ಡ್ರೈವ್, ಒಂದು ಹಾರ್ಡ್ ಡಿಸ್ಕ್ ಪತ್ತೆಯಾಗಿದೆ. ಈಗ ಈ ಎಲ್ಲವನ್ನೂ ಎಫ್ಎಸ್ಎಲ್‌ಗೆ ಕಳುಹಿಸಲಾಗಿದೆ.

ಪ್ರಜ್ವಲ್‌ ರೇವಣ್ಣ ಕೇಸ್‌ಗೆ ಸಂಬಂಧಪಟ್ಟಂತೆ ಮಾಜಿ ಶಾಸಕ ಪ್ರೀತಂ ಗೌಡ ಆಪ್ತರು ಹಾಗೂ ಬಂಧಿತರಾಗಿರುವ ಇಬ್ಬರಿಗೆ ಸೇರಿದ ಹಾಸನ ಮತ್ತು ಬೆಂಗಳೂರಿನ ಕೆಲವು ಸ್ಥಳಗಳಲ್ಲಿ ದಾಳಿ ನಡೆಸಿದ್ದ ಎಸ್ಐಟಿ ಹತ್ತು ಪೆನ್ ಡ್ರೈವ್ ಮತ್ತು ಒಂದು ಹಾರ್ಡ್ ಡಿಸ್ಕ್ ಅನ್ನು ವಶಕ್ಕೆ ತೆಗೆದುಕೊಂಡಿದೆ.

ಎಫ್‌ಎಸ್‌ಎಲ್‌ಗೆ ರವಾನೆ

ಈ ಎಲ್ಲ ಹತ್ತು ಪೆನ್ ಡ್ರೈವ್ ಮತ್ತು ಒಂದು ಹಾರ್ಡ್ ಡಿಸ್ಕ್ ಅನ್ನು ಎಫ್‌ಎಸ್‌ಎಲ್‌ ವರದಿಗಾಗಿ ಕಳುಹಿಸಲಾಗಿದೆ. ಅಲ್ಲಿಂದ ವರದಿ ಬಂದ ಬಳಿಕ ಮುಂದಿನ ತೀರ್ಮಾನವನ್ನು ತೆಗೆದುಕೊಳ್ಳಲು ಎಸ್‌ಐಟಿ ನಿರ್ಧರಿಸಿದೆ. ಇದು ಮೂಲ ಕಾಪಿಯೇ? ಅಥವಾ ಒಬ್ಬರಿಂದ ಒಬ್ಬರಿಗೆ ಹಂಚಿಕೆ ಆಗಿರುವುದೇ ಎಂಬ ನಿಟ್ಟಿನಲ್ಲಿ ಎಫ್‌ಎಸ್‌ಎಲ್‌ನಲ್ಲಿ ಪರಿಶಿಲನೆ ನಡೆಸಲಾಗುತ್ತದೆ.

ಸೆಕ್ಸ್‌ ಕೇಸಲ್ಲಿ ಎಕ್ಸ್‌ ಮಾನ್ಯತೆ ಕಳೆದುಕೊಂಡ ಪ್ರಜ್ವಲ್‌ ರೇವಣ್ಣ!

ಪ್ರಜ್ವಲ್‌ ರೇವಣ್ಣ (Prajwal Revanna Case) ಅವರದ್ದು ಎನ್ನಲಾದ ಅಶ್ಲೀಲ ವಿಡಿಯೊ (Absence video) ಪ್ರಕರಣಕ್ಕೆ ಸಂಬಂಧಿಸಿದಂತೆ ಸೋಷಿಯಲ್‌ ಮೀಡಿಯಾ ಎಕ್ಸ್‌ ಮಹತ್ವದ ತೀರ್ಮಾನವನ್ನು ತೆಗೆದುಕೊಂಡಿದೆ. ವೇರಿಫೈಡ್‌ ಅಕೌಂಟ್‌ ಸ್ಟೇಟಸ್‌ನಿಂದ ಪ್ರಜ್ವಲ್‌ ಹೊರಬಿದ್ದಿದ್ದಾರೆ. ಅವರಿಗಿದ್ದ ಬ್ಲ್ಯೂ ಟಿಕ್‌ ಮಾನ್ಯತೆ ಈಗ ಅಮಾನ್ಯಗೊಂಡಿದೆ.

ಸೋಷಿಯಲ್‌ ಮೀಡಿಯಾ ಎಕ್ಸ್‌ ಈ ಮೊದಲು ಟ್ವಿಟರ್‌ ಆಗಿತ್ತು. ಆಗಿನಿಂದಲೂ ಅಫೀಶಿಯಲ್‌ ಖಾತೆದಾರರಿಗೆ ಬ್ಲ್ಯೂ ಟಿಕ್‌ ಅನ್ನು ನೀಡಲಾಗುತ್ತಿತ್ತು. ಅದಕ್ಕೆ ಕೆಲವೊಂದಿಷ್ಟು ಪ್ರಕ್ರಿಯೆಗಳು ಇದ್ದವು. ಈ ಕಾರಣಕ್ಕೆ ಗಣ್ಯರು, ರಾಜಕಾರಣಿಗಳು, ಸಿನಿಮಾ ತಾರೆಯರು ಸೇರಿದಂತೆ ಹಲವರು ಈ ಬ್ಲ್ಯೂಟಿಕ್‌ ಅನ್ನು ಪಡೆದುಕೊಳ್ಳುತ್ತಿದ್ದರು. ಆದರೆ, ಎಲಾನ್‌ ಮಸ್ಕ್‌ ಟ್ವಿಟರ್‌ ಅನ್ನು ತನ್ನ ತೆಕ್ಕೆಗೆ ತೆಗೆದುಕೊಂಡ ನಂತರ ಹಲವು ಬದಲಾವಣೆಯನ್ನು ತಂದರು. ಬ್ಲ್ಯೂ ಟಿಕ್‌ ಬೇಕೆಂದರೆ ಹಣ ಪಾವತಿ ಮಾಡಬೇಕು ಎಂಬ ನಿಯಮವನ್ನು ಸಹ ತರಲಾಗಿದೆ. ಈಗ ಹಣ ಪಾವತಿ ಮಾಡಿಲ್ಲವೆಂದಾದರೆ ಅಥವಾ ಆ ಖಾತೆ ಬಗ್ಗೆ ದೂರುಗಳು ಬಂದರೆ ಬ್ಲ್ಯೂಟಿಕ್‌ ಅನ್ನು ವಾಪಸ್‌ ಪಡೆಯುವ ಅಧಿಕಾರವನ್ನು ಎಕ್ಸ್‌ ಹೊಂದಿದೆ. ಹೀಗಾಗಿ ಇಲ್ಲಿ ಪ್ರಜ್ವಲ್‌ ರೇವಣ್ಣ ಕೇಸ್‌ನಲ್ಲಿ ಏನಾಗಿದೆ ಎಂಬುದು ಸದ್ಯದ ಕುತೂಹಲವಾಗಿದೆ.

ಬ್ಲ್ಯೂ ಟಿಕ್‌ ಬೇಕೆಂದರೆ ದುಡ್ಡೆಷ್ಟು?

ಗ್ರಾಹಕರು ದುಡ್ಡು ಕೊಟ್ಟು ಈ ಬ್ಲ್ಯೂ ಟಿಕ್ ಮಾರ್ಕ್ ಖರೀದಿಸಬಹುದು. ಮೆಟಾ ವೆರಿಫೈಡ್ ಸಬ್ಸ್‌ಕ್ರಿಪ್ಷನ್ ಆಧಾರಿತ ಸೇವೆಯ ಅನ್ವಯ ಬಳಕೆದಾರರು ತಿಂಗಳಿಗೆ 699 ರೂ. ಪಾವತಿಸಿದರೆ ಬ್ಲೂ ಟಿಕ್ ದೊರೆಯಲಿದೆ. ಇದು ಫೇಸ್‌ಬುಕ್ ಮತ್ತು ಇನ್‌ಸ್ಟಾಗ್ರಾಮ್‌ ಎರಡಕ್ಕೂ ಅನ್ವಯವಾಗಲಿದೆ. ಆದರೆ, ಈಗ ಪ್ರಜ್ವಲ್‌ ಕೇಸ್‌ನಲ್ಲಿ ಯಾವ ಕಾರಣಕ್ಕೆ ಬ್ಲ್ಯೂಟಿಕ್‌ ಅನ್ನು ತೆಗೆಯಲಾಗಿದೆ ಎಂದು ಈವರೆಗೂ ಎಕ್ಸ್‌ ಸ್ಪಷ್ಟನೆ ನೀಡಿಲ್ಲ.

ವಿದೇಶಕ್ಕೆ ಹೋದ ಬಳಿಕ ಕೊನೆಯದಾಗಿ ಟ್ವೀಟ್‌ ಮಾಡಿದ್ದ ಪ್ರಜ್ವಲ್‌

ವಿದೇಶದಿಂದ ಬಾರದ ಪ್ರಜ್ವಲ್‌; ಜರ್ಮನಿಗೆ ಹೋಗುತ್ತಾ ಎಸ್‌ಐಟಿ ಟೀಂ? ಮುಂದಿನ ಆಯ್ಕೆ ಏನು?

ಪ್ರಜ್ವಲ್‌ ರೇವಣ್ಣ ದೇಶಬಿಟ್ಟು 19 ದಿನ ಕಳೆದಿದರೂ ಸುಳಿವಿಲ್ಲ. ಈಗಿನ ಪ್ರಕಾರ, ಸದ್ಯಕ್ಕೆ ಪ್ರಜ್ವಲ್ ವಾಪಸಾಗುವುದು ಅನುಮಾನ ಎನ್ನಲಾಗಿದೆ. ಹಾಗಾಗಿ ಎಸ್‌ಐಟಿ ಅಧಿಕಾರಿಗಳ ಮುಂದಿನ ನಡೆ ಏನು? ಬೇರೆ ದೇಶಕ್ಕೆ ಹೋಗಿ ಅವರನ್ನು ಬಂಧಿಸಿ ಕರೆತರಲು ಸಾಧ್ಯವಿದೆಯೇ? ಅದು ಸಾಧ್ಯವಿಲ್ಲವಾದರೆ ಬೇರೆ ಯಾವ ಮಾರ್ಗವಿದೆ? ಅಥವಾ ಪ್ರಜ್ವಲ್‌ ಬರುವವರೆಗೂ ಕಾಯುತ್ತಾ ಕೂರಬೇಕಾ ಎಂಬಿತ್ಯಾದಿ ಪ್ರಶ್ನೆಗಳು ಎದುರಾಗಿವೆ.

ಈಗಿನ ಮಾಹಿತಿ ಪ್ರಕಾರ ಹಾಗೂ ಗೃಹ ಸಚಿವ ಡಾ. ಜಿ. ಪರಮೇಶ್ವರ್‌ ಅವರ ಹೇಳಿಕೆಯನ್ನು ಗಮನದಲ್ಲಿಟ್ಟುಕೊಂಡು ನೋಡುವುದಾದರೆ ಸದ್ಯ ಎಸ್‌ಐಟಿ ತಂಡದವರು ಬೇರೆ ದೇಶಕ್ಕೆ ತೆರಳಿ ಪ್ರಜ್ವಲ್‌ ಅವರನ್ನು ಕರೆತರಲು ಸಾಧ್ಯವಿಲ್ಲ. ಇನ್ನು ಪ್ರಜ್ವಲ್‌ ಇಲ್ಲಿಂದ ಜರ್ಮನಿಗೆ ಫ್ಲೈಟ್‌ ಟಿಕೆಟ್‌ ಬುಕ್‌ ಮಾಡಿ ಹೋಗಿದ್ದಾರಾದರೂ ಅವರು ಜರ್ಮನಿಯಲ್ಲಿಯೇ ಇದ್ದಾರಾ? ಅಥವಾ ಅಲ್ಲಿಂದ ಬೇರೆ ದೇಶಕ್ಕೇನಾದರೂ ಹೋಗಿದ್ದಾರಾ ಎಂಬುದೂ ಖಾತ್ರಿಯಾಗಿಲ್ಲ. ಆದರೆ, ಅವರು ಜರ್ಮನಿಯಿಂದ ಬೆಂಗಳೂರಿಗೆ ಬರುವಂತೆ ಫ್ಲೈಟ್‌ ಟಿಕೆಟ್‌ ಅನ್ನು ಮಾತ್ರ ಬುಕ್‌ ಮಾಡುತ್ತಾ ಕುಳಿತಿದ್ದಾರೆ. ಕೊನೇ ಕ್ಷಣದಲ್ಲಿ ಫ್ಲೈಟ್‌ ಹತ್ತದೆ ಎಸ್‌ಐಟಿಗೆ ಚಳ್ಳೆಹಣ್ಣು ತಿನ್ನಿಸುತ್ತಿದ್ದಾರೆ. ಅದು ಬಿಟ್ಟರೆ ಇತ್ತ ಸುಳಿಯುವ ಯಾವುದೇ ಲಕ್ಷಣಗಳು ಸದ್ಯಕ್ಕಂತೂ ಗೋಚರಿಸುತ್ತಿಲ್ಲ.

ಹೀಗಾಗಿ ಮೊದಲು ಪ್ರಜ್ವಲ್ ಯಾವ ದೇಶದಲ್ಲಿದ್ದಾರೆ ಎಂಬ ಖಚಿತ ಮಾಹಿತಿಯನ್ನು ಕಲೆ ಹಾಕಬೇಕು. ಇಲ್ಲದೆ ಹೋದರೆ ಈಗಾಗಲೇ ಜಾರಿ ಮಾಡಲಾಗಿರುವ ಬ್ಲೂ ಕಾರ್ನರ್ ನೋಟಿಸ್‌ನಿಂದಾಗಿ ಯಾವ ದೇಶದಿಂದಾದರೂ ಮಾಹಿತಿ ಬರುತ್ತದೆಯೇ ಎಂಬುದನ್ನು ಕಾದು ನೋಡಬೇಕು. ಹೀಗಾಗಿ ಇಂಟರ್ ಪೋಲ್ ಅಧಿಕಾರಿಗಳಿಂದ ಮಾಹಿತಿ ಬರುವವರೆಗೂ ಕಾಯಲೇಬೇಕು.

ಇದನ್ನೂ ಓದಿ: HD Devegowda: 92ನೇ ವರ್ಷದ ಹುಟ್ಟುಹಬ್ಬ ಆಚರಿಸಿಕೊಳ್ಳಲ್ಲ ಎಂದ ಎಚ್‌ಡಿ ದೇವೇಗೌಡ; ಮೊಮ್ಮಗನ ಕೇಸ್‌ನಿಂದ ಈ ತೀರ್ಮಾನ?

ಪ್ರಜ್ವಲ್‌ ಇರುವ ದೇಶ ಗೊತ್ತಾದರೆ ಎಸ್‌ಐಟಿ ಅರೆಸ್ಟ್‌ ಮಾಡಬಹುದಾ?

ಒಂದು ವೇಳೆ ಪ್ರಜ್ವಲ್ ರೇವಣ್ಣ ಅವರು ಜರ್ಮನಿಯಲ್ಲಿಯೇ ಅಥವಾ ಇನ್ಯಾವುದೋ ದೇಶದಲ್ಲಿ ಅಡಗಿದ್ದಾರೆ ಎಂಬುದು ಗೊತ್ತಾದರೆ ಎಸ್‌ಐಟಿ ಹೋಗಿ ಅರೆಸ್ಟ್‌ ಮಾಡಬಹುದಾ ಎಂದು ಕೇಳಿದರೆ, ಅದು ಸಾಧ್ಯವಿಲ್ಲ ಎಂಬ ಉತ್ತರ ಸಿಗಲಿದೆ. ಹಾಗಾಗಿ ಅವರು ಯಾವ ದೇಶದಲ್ಲಿ ಅಡಗಿದ್ದಾರೆಂಬ ಮಾಹಿತಿ ಸಿಕ್ಕರೆ ಇಂಟರ್ ಪೋಲ್ ಮುಖಾಂತರ ಹಸ್ತಾಂತರ ಮಾಡಿಕೊಳ್ಳಬಹುದು. ಅದು ಕೂಡ ಆ ದೇಶ ಹಾಗೂ ನಮ್ಮ ದೇಶದ ನಡುವೆ ಹಸ್ತಾಂತರ ಒಪ್ಪಂದ (Extradition Treaty) ಇರಬೇಕು. ಆಗ ಅಲ್ಲಿನ ಸರ್ಕಾರಕ್ಕೆ ಮಾಹಿತಿ ನೀಡಿ ಹಸ್ತಾಂತರ ಮಾಡಿಕೊಳ್ಳಬಹುದು. ಅದೂ ಆಗದೇ ಹೋದರೆ, ಅವರು ಎಲ್ಲಿದ್ದಾರೆಂದು ತಿಳಿದುಕೊಂಡು ಸುಮ್ಮನೆ ಕೂರಬಹುದೇ ಹೊರತು ಬೇರೇನೂ ಮಾಡುವುದಕ್ಕೆ ಆಗುವುದಿಲ್ಲ. ಆಗ ಪ್ರಜ್ವಲ್ ತಾನಾಗಿಯೇ ಬರುವವರೆಗೂ ಕಾಯಲೇಬೇಕು.

Continue Reading
Advertisement
Shah Rukh Khan
ದೇಶ17 mins ago

ಶಾರುಖ್‌ ಖಾನ್‌ ಜಾಹೀರಾತು ನೋಡಿ ಗುಟ್ಕಾ ತಿಂದ ಮಕ್ಕಳು; ನಟ ಸಾಯಲ್ಲ, ನಾವು ಸಾಯ್ತೀವಾ ಅಂದರು!

Rajat Patidar
ಪ್ರಮುಖ ಸುದ್ದಿ26 mins ago

Rajat Patidar : ರಜತ್ ಪಾಟೀದಾರ್​ ಮುಂದಿನ ಆವೃತ್ತಿಗೆ ಆರ್​ಸಿಬಿಯಲ್ಲೇ ಇರಬೇಕು; ಮಾಜಿ ಆಟಗಾರನ ಸಲಹೆ

ASI who was injured in a road accident died in kunigal
ಕರ್ನಾಟಕ35 mins ago

Road Accident: ರಸ್ತೆ ಅಪಘಾತದಲ್ಲಿ ತೀವ್ರ ಗಾಯಗೊಂಡಿದ್ದ ಎಎಸ್‌ಐ ಚಿಕಿತ್ಸೆ ಫಲಿಸದೆ ಸಾವು

IPL 2024
ಕ್ರಿಕೆಟ್45 mins ago

IPL 2024: ಸಿಎಸ್​​ಕೆ ಮಾಜಿ ಆಟಗಾರನಾಗಿದ್ದರೂ ಈ ಸಲ ಕೊಹ್ಲಿ ಗೆಲ್ಲಲಿ ಎಂದ ಸುರೇಶ್​ ರೈನಾ!

Prajwal Revanna Case KR Nagar victim kidnapping case Satish sent to judicial custody
ಕ್ರೈಂ48 mins ago

Prajwal Revanna Case: ಕೆ.ಆರ್.ನಗರ ಸಂತ್ರಸ್ತೆ ಕಿಡ್ನ್ಯಾಪ್‌ ಕೇಸ್;‌ 2, 6ನೇ ಆರೋಪಿಗಿಲ್ಲ ಬಿಡುಗಡೆ ಭಾಗ್ಯ! ಸತೀಶ್‌ಗೆ ನ್ಯಾಯಾಂಗ ಬಂಧನ

Pay attention to childrens safety during holidays Minister Lakshmi Hebbalkar appeals to parents
ಬೆಳಗಾವಿ53 mins ago

Lakshmi Hebbalkar: ರಜೆಯಲ್ಲಿ ಮಕ್ಕಳ ಸುರಕ್ಷತೆಗೆ ಗಮನ ನೀಡಿ; ಪಾಲಕರಿಗೆ ಹೆಬ್ಬಾಳ್ಕರ್ ಮನವಿ

Four Digit PIN
ತಂತ್ರಜ್ಞಾನ1 hour ago

Four Digit PIN: ಇಂಥ ಪಿನ್ ನಂಬರ್ ಕೊಡ್ತಾ ಇದ್ದೀರಾ? ನಿಮ್ಮ ದುಡ್ಡಿಗೆ ಕಾದಿದೆ ಅಪಾಯ!

Nitish Kumar Reddy
Latest1 hour ago

Nitish Reddy : ಐಪಿಎಲ್​ನಲ್ಲಿ ಮಿಂಚಿದ ಈ ಆಟಗಾರನಿಗೆ ಎಪಿಎಲ್​ನಲ್ಲಿ ಸಿಕ್ಕಿತು ಭರ್ಜರಿ ದುಡ್ಡು

Medicine Price
ದೇಶ1 hour ago

Medicine Price: ಗುಡ್‌ ನ್ಯೂಸ್;‌ ಶುಗರ್‌, ಹೃದ್ರೋಗ ಸೇರಿ 41 ಔಷಧಗಳ ಬೆಲೆ ಇಳಿಸಿದ ಮೋದಿ ಸರ್ಕಾರ

Belagavi News Masked man stabs TC and four others for asking them to show tickets on train
ಕ್ರೈಂ1 hour ago

Belagavi News: ರೈಲಲ್ಲಿ ಟಿಕೆಟ್‌ ತೋರಿಸು ಎಂದಿದ್ದಕ್ಕೆ ಟಿಸಿ ಸೇರಿ ನಾಲ್ವರಿಗೆ ಚಾಕು ಇರಿದ ಮುಸುಕುಧಾರಿ; ಒಬ್ಬ ಸಾವು, ನಾಲ್ವರು ಗಂಭೀರ

Sharmitha Gowda in bikini
ಕಿರುತೆರೆ7 months ago

Geetha Serial Kannada: ನಿದ್ದೆ ಕದ್ದ ಚೋರಿ! ನಟಿ `ಭಾನುಮತಿ’ ಹಾಟ್‌ ಪೋಟೊಗಳಿಗೆ ಫ್ಯಾನ್ಸ್ ಫುಲ್ ಫಿದಾ

Kannada Serials
ಕಿರುತೆರೆ7 months ago

Kannada Serials TRP: 2ನೇ ಸ್ಥಾನದಲ್ಲಿ 2 ಧಾರಾವಾಹಿಗಳು; ಟಿಆರ್‌ಪಿ ರೇಸ್‌ನಲ್ಲಿಲ್ಲ ಭಾಗ್ಯಲಕ್ಷ್ಮೀ!

Bigg Boss- Saregamapa 20 average TRP
ಕಿರುತೆರೆ7 months ago

Kannada Serials TRP: ಏಳನೇ ಸ್ಥಾನಕ್ಕೆ ʻಅಮೃತಧಾರೆʼ ಕುಸಿತ; ಬಿಗ್‌ ಬಾಸ್‌-ಸರಿಗಮಪ ಟಿಆರ್‌ಪಿ ಎಷ್ಟು?

galipata neetu
ಕಿರುತೆರೆ6 months ago

Kanyadana Serial: ಕಿರುತೆರೆಗೆ ಮತ್ತೆ ಎಂಟ್ರಿ ಕೊಟ್ಟ ʻಗಾಳಿಪಟʼ ಖ್ಯಾತಿಯ ʻನೀತುʼ!

Kannada Serials
ಕಿರುತೆರೆ8 months ago

Kannada Serials TRP: ನಾಲ್ಕನೇ ಸ್ಥಾನಕ್ಕೆ ಕುಸಿತ ಕಂಡ ʻಸೀತಾ ರಾಮʼ; ಟಿಆರ್‌ಪಿ ರೇಸ್‌ಗೆ ʻಭಾಗ್ಯಲಕ್ಷ್ಮಿʼ ಬ್ಯಾಕ್‌!

Kannada Serials
ಕಿರುತೆರೆ7 months ago

Kannada Serials TRP: ಟಿಆರ್‌ಪಿಯಲ್ಲಿ ʻಭಾಗ್ಯಲಕ್ಷ್ಮೀʼ ಹವಾ; ʻಪುಟ್ಟಕ್ಕನ ಮಕ್ಕಳುʼ ಧಾರಾವಾಹಿಗೆ ಸಂಕಷ್ಟ!

Bigg Boss' dominates TRP; Sita Rama fell to the sixth position
ಕಿರುತೆರೆ7 months ago

Kannada Serials TRP: ಟಿಆರ್‌ಪಿಯಲ್ಲಿ ʻಬಿಗ್ ಬಾಸ್ʼದೇ ಮೇಲುಗೈ; 6ನೇ ಸ್ಥಾನಕ್ಕೆ ಕುಸಿದ ʻಸೀತಾ ರಾಮʼ

geetha serial Dhanush gowda engagement
ಕಿರುತೆರೆ5 months ago

Dhanush Gowda: ಗೀತಾ ಧಾರಾವಾಹಿ ನಟನ ನಿಶ್ಚಿತಾರ್ಥ; ಭವ್ಯಾಳ ಕಮೆಂಟ್‌ ಬಾಕ್ಸ್‌ ಆಫ್‌!

varun
ಕಿರುತೆರೆ6 months ago

Brindavana Serial: ʼಬೃಂದಾವನʼ ಧಾರಾವಾಹಿಯಲ್ಲಿ ದೊಡ್ಡ ಟ್ವಿಸ್ಟ್‌; ಪ್ರಮುಖ ಪಾತ್ರಧಾರಿಯೇ ಬದಲು

Kannada Serials
ಕಿರುತೆರೆ8 months ago

Kannada Serials TRP: ಟಿಆರ್‌ಪಿಯಲ್ಲಿ ಏರಿಕೆ ಕಂಡ ʻಅಮೃತಧಾರೆʼ; ʻಗಟ್ಟಿಮೇಳʼಕ್ಕೆ ನಾಲ್ಕನೇ ಸ್ಥಾನ!

Karnataka Weather Forecast
ಮಳೆ4 hours ago

Karnataka Weather : ಭಾರಿ ಮಳೆಗೆ ಕೊಟ್ಟೂರು ಬಸ್ ಸ್ಟ್ಯಾಂಡ್‌ ಜಲಾವೃತ; ‌ ತಾಯಿ-ಮಗ ಗ್ರೇಟ್‌ ಎಸ್ಕೇಪ್‌

Drowned in water
ಹಾಸನ7 hours ago

Drowned in water : ಕೆರೆಯಲ್ಲಿ ಈಜಲು ಹೋದ ನಾಲ್ವರು ನೀರುಪಾಲು; ಓರ್ವ ಬಾಲಕ ಪಾರು

Suspicious Case
ಬೆಂಗಳೂರು10 hours ago

Suspicious Case : ಬಾತ್‌ ರೂಂನಲ್ಲಿತ್ತು ಕಾಲೇಜು ಹುಡುಗಿ ಡೆಡ್‌ ಬಾಡಿ; ಕುತ್ತಿಗೆ ಕೊಯ್ದು ಸಾಯಿಸಿದವರು ಯಾರು?

Prajwal Revanna Case
ಕರ್ನಾಟಕ2 days ago

Prajwal Revanna Case: ಪ್ರಜ್ವಲ್‌ ರೇವಣ್ಣ ಇಂದೇ ಜರ್ಮನಿಯಿಂದ ಭಾರತಕ್ಕೆ? ಎಸ್‌ಐಟಿ ಅಲರ್ಟ್‌

Dina Bhavishya
ಭವಿಷ್ಯ2 days ago

Dina Bhavishya : ಭೂ ವ್ಯವಹಾರಕ್ಕೆ ಇದು ಸೂಕ್ತ ಸಮಯ; ವ್ಯಾಪಾರದಲ್ಲಿ ಡಬಲ್‌ ಲಾಭ

HD Revanna Released first reaction after release will be acquitted of all charges
ರಾಜಕೀಯ2 days ago

HD Revanna Released: ರಿಲೀಸ್‌ ಬಳಿಕ ರೇವಣ್ಣ ಫಸ್ಟ್‌ ರಿಯಾಕ್ಷನ್;‌ ನ್ಯಾಯಾಂಗದ ಮೇಲೆ ನಂಬಿಕೆ ಇದೆ; ಆರೋಪ ಮುಕ್ತನಾಗುವೆ

CM Siddaramaiah says Our government is stable for 5 years BJP will disintegrate
Lok Sabha Election 20242 days ago

CM Siddaramaiah: ನಮ್ಮ ಸರ್ಕಾರ 5 ವರ್ಷ ಸುಭದ್ರ; ಚುನಾವಣೆ ಬಳಿಕ ಬಿಜೆಪಿ ಛಿದ್ರ ಎಂದ ಸಿಎಂ ಸಿದ್ದರಾಮಯ್ಯ!

I dont want to go to other states for Lok Sabha Election 2024 campaign for Congress says CM Siddaramaiah
Lok Sabha Election 20242 days ago

CM Siddaramaiah: ಕಾಂಗ್ರೆಸ್‌ ಪರ ಬೇರೆ ರಾಜ್ಯಗಳಿಗೆ ಪ್ರಚಾರಕ್ಕೆ ಹೋಗಲು ನನಗೆ ಇಷ್ಟವಿಲ್ಲ: ಸಿಎಂ ಸಿದ್ದರಾಮಯ್ಯ!

HD Revanna Bail I am not happy that Revanna has been released says HD Kumaraswamy
ರಾಜಕೀಯ2 days ago

HD Revanna Bail: ರೇವಣ್ಣ ಬಿಡುಗಡೆಯಾಗಿದ್ದಕ್ಕೆ ನಾನಂತೂ ಖುಷಿ ಪಡಲ್ಲ ಎಂದ ಎಚ್‌ಡಿಕೆ!

karnataka Rain Effected
ಬೆಂಗಳೂರು2 days ago

Karnataka Rain: ಮಿಡ್‌ನೈಟ್‌ ಮಳೆ ಅವಾಂತರ; ಮರಗಳು, ವಿದ್ಯುತ್‌ ಕಂಬಗಳು ಧರೆಗೆ, ಕುಸಿದು ಬಿದ್ದ ಮನೆ

ಟ್ರೆಂಡಿಂಗ್‌