‌Caste Census Report: ಜಾತಿ ಗಣತಿ ಸ್ವೀಕಾರದ ಹಿಂದೆ ಸಿದ್ದರಾಮಯ್ಯ ಪ್ಲ್ಯಾನ್‌ ಏನು? ಕಾರಣ ಬಿಚ್ಚಿಟ್ಟಿದ್ದಾರೆ ಸುನಿಲ್‌ ಕುಮಾರ್! - Vistara News

ರಾಜಕೀಯ

‌Caste Census Report: ಜಾತಿ ಗಣತಿ ಸ್ವೀಕಾರದ ಹಿಂದೆ ಸಿದ್ದರಾಮಯ್ಯ ಪ್ಲ್ಯಾನ್‌ ಏನು? ಕಾರಣ ಬಿಚ್ಚಿಟ್ಟಿದ್ದಾರೆ ಸುನಿಲ್‌ ಕುಮಾರ್!

‌Caste Census Report: ಸಿಎಂ ಸಿದ್ದರಾಮಯ್ಯ ಪಲಾಯನವಾದ ಮಾಡಿದ್ದಾರೆ. ಈ ಪಲಾಯನವಾದ ಸಾಕು. ಬದ್ಧತೆ ಇದ್ದರೆ ತಕ್ಷಣ ಸಂಪುಟ ಸಭೆಯಲ್ಲಿ ವರದಿ ಸ್ವೀಕರಿಸಿ, ಚರ್ಚೆ ನಡೆಸುವುದಕ್ಕೆ ವಿಧಾನಮಂಡಲದ ವಿಶೇಷ ಅಧಿವೇಶನ ಕರೆಯಿರಿ ಎಂದು ವಿ. ಸುನಿಲ್‌ ಕುಮಾರ್ ಸವಾಲು ಹಾಕಿದ್ದಾರೆ.

VISTARANEWS.COM


on

Siddaramaiah plan behind accepting Caste Census Report Sunil Kumar reveals reason
ಮಹತ್ವದ, ಕುತೂಹಲಕರ ಸುದ್ದಿಗಾಗಿ ಫಾಲೊ ಮಾಡಿ
Koo

ಬೆಂಗಳೂರು: ಸಾಮಾಜಿಕ ಮತ್ತು ಆರ್ಥಿಕ ಸಮೀಕ್ಷೆಯನ್ನೊಳಗೊಂಡ (Social and Economic Survey) ಜಾತಿ ಗಣತಿ ವರದಿಯನ್ನು (Caste Census report) ಸಿಎಂ ಸಿದ್ದರಾಮಯ್ಯ (CM Siddaramaiah) ಅವರು ಅಧಿಕೃತವಾಗಿ ಈಗ ಸ್ವೀಕಾರ ಮಾಡಿದ್ದಾರೆ. ಆದರೆ, ಈ ಮೂಲಕ ಸಿದ್ದರಾಮಯ್ಯ ಅವರು ಗೊಂದಲವನ್ನು ಸೃಷ್ಟಿ ಮಾಡಿದ್ದಾರೆ. ಈ ವರದಿಯ ಸ್ವರೂಪ ಏನೆಂಬುದು ಮೊದಲು ನಿರ್ಧಾರ ಆಗಬೇಕಿದೆ. ಜಾರಿಗೆ ಮುನ್ನ ವಿಸ್ತೃತ ಚರ್ಚೆ ಆಗಬೇಕಿದೆ. ಸಿಎಂಗೆ ಬದ್ಧತೆ ಇದ್ದಿದ್ದರೆ ರಾಜ್ಯಪಾಲರ ಭಾಷಣ ಮುಗಿದ ತಕ್ಷಣವೇ ವರದಿಯನ್ನು ಸ್ವೀಕರಿಸಿ ಸದನದಲ್ಲಿ ಮಂಡಿಸಬೇಕಿತ್ತು. ಇಲ್ಲಿ ನಿಮ್ಮ ಉದ್ದೇಶ ಗೊಂದಲವನ್ನು ಜೀವಂತವಾಗಿಡುವುದಷ್ಟೇ ಆಗಿದೆ ಎಂದು ಬಿಜೆಪಿ ರಾಜ್ಯ ಪ್ರಧಾನ ಕಾರ್ಯದರ್ಶಿ ಹಾಗೂ ಶಾಸಕ ವಿ. ಸುನಿಲ್‌ ಕುಮಾರ್‌ (V Sunil Kumar) ಹೇಳಿದ್ದಾರೆ.

ಈ ಬಗ್ಗೆ ಮಾಧ್ಯಮ ಪ್ರಕಟಣೆ ಹೊರಡಿಸಿರುವ ಸುನಿಲ್‌ ಕುಮಾರ್‌, ಸಿಎಂ ಸಿದ್ದರಾಮಯ್ಯ ಪಲಾಯನವಾದ ಮಾಡಿದ್ದಾರೆ. ಈ ಪಲಾಯನವಾದ ಸಾಕು. ಬದ್ಧತೆ ಇದ್ದರೆ ತಕ್ಷಣ ಸಂಪುಟ ಸಭೆಯಲ್ಲಿ ವರದಿ ಸ್ವೀಕರಿಸಿ, ಚರ್ಚೆ ನಡೆಸುವುದಕ್ಕೆ ವಿಧಾನಮಂಡಲದ ವಿಶೇಷ ಅಧಿವೇಶನ ಕರೆಯಬೇಕು ಎಂದು ಸವಾಲು ಹಾಕಿದ್ದಾರೆ.

ಸುನಿಲ್‌ ಕುಮಾರ್‌ ಹೇಳಿದ್ದೇನು?

ಹತ್ತು ವರ್ಷಗಳ ಸುದೀರ್ಘ ವನವಾಸದ ಬಳಿಕ ಹಿಂದುಳಿದ ವರ್ಗಗಳ ಆಯೋಗದಿಂದ ಸಿಎಂ ಸಿದ್ದರಾಮಯ್ಯ ಅವರು ಸ್ವೀಕರಿಸಿರುವ ವರದಿಯ ಸ್ವರೂಪ ಏನೆಂಬುದು‌ ಮೊದಲು‌ ನಿರ್ಧಾರವಾಗಬೇಕಿದೆ. ಇದು ಜಾತಿಗಣತಿಯೋ? ಶೈಕ್ಷಣಿಕ ಸಮೀಕ್ಷೆಯೋ? ಅಥವಾ ಆರ್ಥಿಕ ಸಮೀಕ್ಷೆಯೋ? ಎಂಬುದನ್ನು ಸರ್ಕಾರ ಸ್ಪಷ್ಟಪಡಿಸಬೇಕು.

150 ಕೋಟಿ ರೂಪಾಯಿಗೂ ಹೆಚ್ಚು ಹಣ ಖರ್ಚು ಮಾಡಿರುವ ರಾಜ್ಯ ಸರ್ಕಾರ ಸಮಾಜದಲ್ಲಿ ಅಂತಿಮವಾಗಿ ಗೊಂದಲವನ್ನು ಸೃಷ್ಟಿ ಮಾಡಿದೆ. ಈ ವರದಿ ಜಾರಿಗೆ ಮುನ್ನ ವಿಸ್ತೃತ ಚರ್ಚೆಯ ಅಗತ್ಯವಿದೆ. ಹೀಗಾಗಿ ಶಾಸನ ಸಭೆಯಲ್ಲಿ ವರದಿಯನ್ನು ಮಂಡಿಸಿ ಎಲ್ಲ ಗೊಂದಲಗಳಿಗೆ ತೆರೆ ಎಳೆಯಬೇಕಾದದ್ದು ಸರ್ಕಾರದ ಕರ್ತವ್ಯವಾಗಿದೆ. ಈ ವರದಿಯ ವಿಚಾರದಲ್ಲಿ ದಶಮಾನದ ಗೊಂದಲ ಸೃಷ್ಟಿಸಿದ ಸಿದ್ದರಾಮಯ್ಯ ಅವರು ವರದಿಯನ್ನು ಸ್ವೀಕರಿಸಿ ಕೈ ತೊಳೆದುಕೊಂಡರೆ ಸಾಲುವುದಿಲ್ಲ. ಹಿಂದುಳಿದ ವರ್ಗ, ಪರಿಶಿಷ್ಟ ಜಾತಿ, ಪಂಗಡದ ಆಶಯಕ್ಕೆ ಆಯೋಗ ಎಷ್ಟರಮಟ್ಟಿಗೆ ಸ್ಪಂದಿಸಿದೆ ಎಂಬುದನ್ನು ಸಾಬೀತುಪಡಿಸಬೇಕಾಗುತ್ತದೆ. ಗೊಂದಲಗಳಿಗೆ ಮೊದಲು ತೆರೆ ಬೀಳಲಿ.

ಗೊಂದಲವನ್ನು ಜೀವಂತವಾಗಿಡುವ ಉದ್ದೇಶ

ಸಿಎಂ ಸಿದ್ದರಾಮಯ್ಯನವರೇ ನಿಮಗೆ ಬದ್ಧತೆ ಇದ್ದಿದ್ದರೆ ರಾಜ್ಯಪಾಲರ ಭಾಷಣ ಮುಗಿದ ತಕ್ಷಣವೇ ವರದಿಯನ್ನು ಸ್ವೀಕರಿಸಿ ಸದನದಲ್ಲಿ ಮಂಡಿಸಬೇಕಿತ್ತು. ಆದರೆ, ನಿಮ್ಮ ಉದ್ದೇಶ ಗೊಂದಲವನ್ನು ಜೀವಂತವಾಗಿಡುವುದಷ್ಟೇ ಆಗಿದೆ. ಹೀಗಾಗಿ ಅಧಿವೇಶನದ ಕೊನೆಯ ದಿನ ವರದಿ ಸ್ವೀಕರಿಸಿದ್ದೀರಿ. ಈ ಪಲಾಯನವಾದ ಸಾಕು. ಬದ್ಧತೆ ಇದ್ದರೆ ತಕ್ಷಣ ಸಂಪುಟ ಸಭೆಯಲ್ಲಿ ವರದಿ ಸ್ವೀಕರಿಸಿ, ಚರ್ಚೆ ನಡೆಸುವುದಕ್ಕೆ ವಿಧಾನ ಮಂಡಲದ ವಿಶೇಷ ಅಧಿವೇಶನ ಕರೆಯಿರಿ” ಎಂದು ಸುನಿಲ್‌ ಕುಮಾರ್‌ ಸವಾಲು ಹಾಕಿದ್ದಾರೆ.

ವರದಿ ಪ್ರಕಾರ ಯಾವ ಜಾತಿ, ಧರ್ಮದವರು ಎಷ್ಟಿದ್ದಾರೆ?

  • ಪರಿಶಿಷ್ಟ ಜಾತಿ(ಎಸ್’ಸಿ)- 1.08 ಕೋಟಿ
  • ಪರಿಶಿಷ್ಟ ಪಂಗಡ (ಎಸ್‌ಟಿ)- 40.45 ಲಕ್ಷ
  • ಮುಸ್ಲಿಮರು- 70 ಲಕ್ಷ
  • ಲಿಂಗಾಯತ- 65 ಲಕ್ಷ
  • ಒಕ್ಕಲಿಗ- 60 ಲಕ್ಷ
  • ಕುರುಬರು- 45 ಲಕ್ಷ
  • ಈಡಿಗ- 15 ಲಕ್ಷ
  • ವಿಶ್ವಕರ್ಮ- 15
  • ಬೆಸ್ತ- 15 ಲಕ್ಷ
  • ಬ್ರಾಹ್ಮಣ- 14 ಲಕ್ಷ
  • ಗೊಲ್ಲ (ಯಾದವ) – 10 ಲಕ್ಷ
  • ಮಡಿವಾಳ ಸಮಾಜ – 6
  • ಅರೆ ಅಲೆಮಾರಿ – 6 ಲಕ್ಷ
  • ಕುಂಬಾರ – 5 ಲಕ್ಷ
  • ಸವಿತಾ ಸಮಾಜ – 5 ಲಕ್ಷ

ಇದನ್ನೂ ಓದಿ: Sedition case: ರಾಜ್ಯಪಾಲರ ಅಂಗಳಕ್ಕೆ ‘ಪಾಕಿಸ್ತಾನ್‌ ಜಿಂದಾಬಾದ್‌’ ಕದನ; ಸರ್ಕಾರ ವಜಾಕ್ಕೆ ಬಿಜೆಪಿ ಆಗ್ರಹ

ವರದಿಯ ಸಾರಾಂಶ ಏನು?

  • ಒಟ್ಟು 5.98 ಕೋಟಿ ಮಂದಿಯ ಸಮೀಕ್ಷೆ
  • ಸಮೀಕ್ಷೆಯಿಂದ ಹೊರಗುಳಿದವರ ಪ್ರಮಾಣ 32 ಲಕ್ಷ
  • ರಾಜ್ಯ ಹಿಂದುಳಿದ ವರ್ಗಗಳ ಆಯೋಗವು ನಡೆಸಿದ ಶೈಕ್ಷಣಿಕ, ಸಾಮಾಜಿಕ ಮತ್ತು ಆರ್ಥಿಕ ಸಮೀಕ್ಷೆ
  • ಕರ್ನಾಟಕದಲ್ಲಿ ದಲಿತರ ಪ್ರಮಾಣವೇ ಹೆಚ್ಚು
  • ಕುರುಬರೇ ಅತ್ಯಂತ ಹಿಂದುಳಿದ ವರ್ಗ
  • ಸಮೀಕ್ಷೆಗೊಳಪಟ್ಟ ಜಾತಿಗಳ ಸಂಖ್ಯೆ 1,351
  • ಹೊಸದಾಗಿ ದಾಖಲಾದ ಜಾತಿಗಳ ಸಂಖ್ಯೆ 192
  • ಸರ್ಕಾರ ಗುರುತಿಸಿರುವ ಇತರೆ ಹಿಂದುಳಿದ ಜಾತಿಗಳು‌ (ಒಬಿಸಿ) 816
ಕ್ಷಣ ಕ್ಷಣದ ಮಾಹಿತಿಗಾಗಿ Vistara News FaceBook ಪೇಜ್ ಫಾಲೋ ಮಾಡಿ
ಮಹತ್ವದ ಮಾಹಿತಿಗಾಗಿ ವಿಸ್ತಾರ ನ್ಯೂಸ್ ಆ್ಯಪ್ ಉಚಿತವಾಗಿ ಡೌನ್ ಲೋಡ್ ಮಾಡಿಕೊಳ್ಳಿ: Andriod App | IOS App
Continue Reading
Click to comment

Leave a Reply

Your email address will not be published. Required fields are marked *

ಪ್ರಮುಖ ಸುದ್ದಿ

Stock Market Crash : ವಿದೇಶಿ ಹೂಡಿಕೆಗಳು ಬರದಂತೆ ರಾಹುಲ್ ಗಾಂಧಿ ಪಿತೂರಿ ಮಾಡುತ್ತಿದ್ದಾರೆ; ಬಿಜೆಪಿಯಿಂದ ತಿರುಗೇಟು

Stock Market Crash : ಇಂದು, ಭಾರತದ ಷೇರು ಮಾರುಕಟ್ಟೆ ವಿಶ್ವದ ಅಗ್ರ 5 ಆರ್ಥಿಕತೆಗಳ ಮಾರುಕಟ್ಟೆಯನ್ನು ಪ್ರವೇಶಿಸಿದೆ. ಮೋದಿ ಸರ್ಕಾರದ ಅಡಿಯಲ್ಲಿ ಮಾರುಕಟ್ಟೆಯಲ್ಲಿ ಪಟ್ಟಿ ಮಾಡಲಾದ ಪಿಎಸ್​ಯುಗಳ ಮಾರುಕಟ್ಟೆ ಮೊತ್ತ 4 ಪಟ್ಟು ಹೆಚ್ಚಾಗಿದೆ. ಆದರೆ ರಾಹುಲ್ ಅದನ್ನು ನಾಶ ಮಾಡಲು ಯತ್ನಿಸುತ್ತಿದ್ದಾರೆ ಎಂದು ಗೋಯಲ್ ಹೇಳಿದರು.

VISTARANEWS.COM


on

Stock Market Crash
Koo

ನವದೆಹಲಿ: ಷೇರು ಮಾರುಕಟ್ಟೆ ಜೂ. 4ಕ್ಕೆ ಪತನಗೊಂಡಿರುವುದು (Stock Market Crash) ಒಂದು ಹಗರಣ. ಮೋದಿ ಹಾಗೂ ಅಮಿತ್​ ಶಾ ಇದನ್ನು ನಡೆಸಿದ್ದಾರೆ ಎಂಬುದಾಗಿ ಕಾಂಗ್ರೆಸ್ ನಾಯಕ ರಾಹುಲ್ ಗಾಂಧಿ ಗುರುವಾರ ಮಾಡಿದ ಆರೋಪಕ್ಕೆ ಬಿಜೆಪಿ ತಿರುಗೇಟು ನೀಡಿದೆ. ಲೋಕಸಭಾ ಚುನಾವಣೆಯಲ್ಲಿನ ಸೋಲಿನಿಂದ ರಾಹುಲ್ ಗಾಂಧಿ ಇನ್ನೂ ಹೊರಬಂದಿಲ್ಲ. ಈಗ, ಅವರು ಮಾರುಕಟ್ಟೆ ಹೂಡಿಕೆದಾರರನ್ನು ದಾರಿತಪ್ಪಿಸಲು ಪಿತೂರಿ ನಡೆಸುತ್ತಿದ್ದಾರೆ. ಇಂದು, ಭಾರತವು ಐದನೇ ಅತಿದೊಡ್ಡ ಆರ್ಥಿಕತೆಯಾಗಿದೆ. ಅದನ್ನು ತಡೆಯಲು ರಾಹುಲ್ ಯತ್ನಿಸುತ್ತಿದ್ದಾರೆ ಎಂದು ಎಂದು ಬಿಜೆಪಿ ಮುಖಂಡ ಪಿಯೂಷ್ ಗೋಯಲ್ ಪತ್ರಿಕಾಗೋಷ್ಠಿಯಲ್ಲಿ ಹೇಳಿದ್ದಾರೆ.

ಮೋದಿ ಸರ್ಕಾರದ ಕಳೆದ 10 ವರ್ಷಗಳಲ್ಲಿ ಮೊದಲ ಬಾರಿಗೆ ನಮ್ಮ ಮಾರುಕಟ್ಟೆ ಸಾಮರ್ಥ್ಯ 5 ಟ್ರಿಲಿಯನ್ ಡಾಲರ್ ದಾಟಿದೆ. ಇಂದು, ಭಾರತದ ಷೇರು ಮಾರುಕಟ್ಟೆ ವಿಶ್ವದ ಅಗ್ರ 5 ಆರ್ಥಿಕತೆಗಳ ಮಾರುಕಟ್ಟೆಯನ್ನು ಪ್ರವೇಶಿಸಿದೆ. ಮೋದಿ ಸರ್ಕಾರದ ಅಡಿಯಲ್ಲಿ ಮಾರುಕಟ್ಟೆಯಲ್ಲಿ ಪಟ್ಟಿ ಮಾಡಲಾದ ಪಿಎಸ್​ಯುಗಳ ಮಾರುಕಟ್ಟೆ ಮೊತ್ತ 4 ಪಟ್ಟು ಹೆಚ್ಚಾಗಿದೆ. ಆದರೆ ರಾಹುಲ್ ಅದನ್ನು ನಾಶ ಮಾಡಲು ಯತ್ನಿಸುತ್ತಿದ್ದಾರೆ ಎಂದು ಗೋಯಲ್ ಹೇಳಿದರು.

ಷೇರು ಮಾರುಕಟ್ಟೆ ಹಗರಣ ನಡೆದಿದ್ದು, ಪ್ರಧಾನಿ ನರೇಂದ್ರ ಮೋದಿ ಮತ್ತು ಕೇಂದ್ರ ಗೃಹ ಸಚಿವ ಅಮಿತ್ ಶಾ ನೇರವಾಗಿ ಭಾಗಿಯಾಗಿದ್ದಾರೆ ಎಂದು ರಾಹುಲ್ ಗಾಂಧಿ ಆರೋಪಿಸಿದ ನಂತರ ಬಿಜೆಪಿ ಈ ಪ್ರತಿಕ್ರಿಯೆ ನೀಡಿದೆ.

ಷೇರು ಮಾರುಕಟ್ಟೆಯಲ್ಲಿ ಹೂಡಿಕೆ ಮಾಡುವ ಐದು ಕೋಟಿ ಕುಟುಂಬಗಳಿಗೆ ಪ್ರಧಾನಿ ಮತ್ತು ಕೇಂದ್ರ ಗೃಹ ಸಚಿವರು ನಿರ್ದಿಷ್ಟ ಹೂಡಿಕೆ ಸಲಹೆ ಏಕೆ ನೀಡಿದರು? ಹೂಡಿಕೆ ಸಲಹೆ ನೀಡುವುದು ಅವರ ಕೆಲಸವೇ? ಷೇರುಗಳನ್ನು ತಿರುಚಿದ್ದಕ್ಕಾಗಿ ಸೆಬಿ ತನಿಖೆಯಲ್ಲಿರುವ ಒಂದೇ ವ್ಯವಹಾರ ಗುಂಪಿನ ಒಡೆತನದ ಒಂದೇ ಮಾಧ್ಯಮಕ್ಕೆ ಎರಡೂ ಸಂದರ್ಶನಗಳನ್ನು ಏಕೆ ನೀಡಲಾಯಿತು ಎಂದು ರಾಹುಲ್ ಗಾಂಧಿ ಸಂಜೆ ಪತ್ರಿಕಾಗೋಷ್ಠಿಯಲ್ಲಿ ಪ್ರಶ್ನಿಸಿದರು.

ಕಾಂಗ್ರೆಸ್ ವಿರುದ್ಧ ವಾಗ್ದಾಳಿ ಮುಂದುವರಿಸಿದ ಗೋಯಲ್, 10 ವರ್ಷಗಳ ಹಿಂದೆ ಯುಪಿಎ ಸರ್ಕಾರ ಅಧಿಕಾರದಲ್ಲಿದ್ದಾಗ, ಆ ಸಮಯದಲ್ಲಿ ಭಾರತದ ಮಾರುಕಟ್ಟೆ ಕ್ಯಾಪ್ 67 ಲಕ್ಷ ಕೋಟಿ ರೂ. ಇಂದು ಮಾರುಕಟ್ಟೆ ಕ್ಯಾಪ್ 415 ಲಕ್ಷ ಕೋಟಿ ರೂ.ಗೆ ಏರಿದೆ.

ಇದನ್ನೂ ಓದಿ: Unemployment Rate : ಭಾರತದಲ್ಲಿ ನಿರುದ್ಯೋಗ ಸಮಸ್ಯೆ ಒಂದೇ ವರ್ಷದಲ್ಲಿ ಶೇಕಡಾ 4 ಇಳಿಕೆ; ವರದಿ

“ಜೂನ್ 4 ರಂದು ಬಿಜೆಪಿ ದಾಖಲೆಯ ಸಂಖ್ಯೆಯನ್ನು ತಲುಪುತ್ತಿದ್ದಂತೆ, ಷೇರು ಮಾರುಕಟ್ಟೆಯೂ ಹೊಸ ದಾಖಲೆಯ ಗರಿಷ್ಠ ಮಟ್ಟವನ್ನು ತಲುಪುತ್ತದೆ ಎಂದು ನಾನು ವಿಶ್ವಾಸದಿಂದ ಹೇಳಬಲ್ಲೆ” ಎಂದು ಪ್ರಧಾನಿ ಮೋದಿ ಮೇ 23 ರಂದು ಹೇಳಿದ್ದರು.

ಕೇಂದ್ರ ಗೃಹ ಸಚಿವ ಶಾ, ಈ ಹಿಂದೆಯೂ ಮಾರುಕಟ್ಟೆ ಕುಸಿದಿದೆ. ಆದ್ದರಿಂದ ಇದನ್ನು ನೇರವಾಗಿ ಚುನಾವಣೆಗೆ ಲಿಂಕ್ ಮಾಡಬಾರದು. ಕೆಲವು ವದಂತಿಗಳು ಪತನ ಹೆಚ್ಚಿಸಿರಬಹುದು. ನನ್ನ ಅಭಿಪ್ರಾಯದಲ್ಲಿ, ಜೂನ್ 4 ರೊಳಗೆ ಖರೀದಿಸಿ. ಮಾರುಕಟ್ಟೆಯು ಉತ್ತುಂಗಕ್ಕೇರಲಿದೆ.” ಎಂದು ಹೇಳಿದ್ದರು.

Continue Reading

ಕರ್ನಾಟಕ

Uttara Kannada News: ಉ.ಕ ಜಿಲ್ಲೆ ಬಿಜೆಪಿಯ ಗಟ್ಟಿನೆಲ ಎಂಬುದು ಮತ್ತೊಮ್ಮೆ ಸಾಬೀತು: ಹರಿಪ್ರಕಾಶ್‌ ಕೋಣೆಮನೆ

Uttara Kannada News: ವಿಶ್ವವೇ ಕುತೂಹಲದಿಂದ ನಿರೀಕ್ಷಿಸುತ್ತಿದ್ದ ಲೋಕಸಭಾ ಚುನಾವಣೆ ಮುಕ್ತಾಯವಾಗಿ ಫಲಿತಾಂಶ ಬಂದಿದ್ದು, ನರೇಂದ್ರ ಮೋದಿ ಅವರು ಮೂರನೇ ಬಾರಿ ಪ್ರಧಾನಿ ಆಗುವ ಕಡೆಗೆ ಹೆಜ್ಜೆ ಇಡುತ್ತಿರುವುದು ಹೆಮ್ಮೆಯ ಸಂಗತಿ. ಈ ಬಾರಿ ಚುನಾವಣೆಯಲ್ಲಿ ಇವಿಎಂ ಮೇಲೆ ಯಾರೂ ಆರೋಪ ಮಾಡಿಲ್ಲ, ಮೋದಿಯವರು ಗೆದ್ದರು, ಇವಿಎಂ ಕೂಡ ಗೆದ್ದಿತು. ಮೋದಿ ಮತ್ತೆ ಪ್ರಧಾನಮಂತ್ರಿ ಆಗುತ್ತಾರೆ, ಸ್ಥಿರ ಸರ್ಕಾರ ಕೊಡಲಿದ್ದಾರೆ ಎಂದು ಬಿಜೆಪಿ ರಾಜ್ಯ ವಕ್ತಾರ ಹರಿಪ್ರಕಾಶ್‌ ಕೋಣೆಮನೆ ಹೇಳಿದರು.

VISTARANEWS.COM


on

BJP State Spokesperson Hariprakash konemane pressmeet at yallapura
Koo

ಯಲ್ಲಾಪುರ: ಉತ್ತರ ಕನ್ನಡ ಜಿಲ್ಲೆ (Uttara Kannada News) ಬಿಜೆಪಿಯ ಗಟ್ಟಿನೆಲ ಎಂಬುದು ಮತ್ತೊಮ್ಮೆ ಸಾಬೀತಾಗಿದೆ. ರಾಜ್ಯದ 28 ಲೋಕಸಭಾ ಕ್ಷೇತ್ರಗಳ ಪೈಕಿ ವಿಶ್ವೇಶ್ವರ ಹೆಗಡೆ ಕಾಗೇರಿಯವರನ್ನು ಮತದಾರರು ಅತ್ಯಂತ ಗರಿಷ್ಠ ಪ್ರಮಾಣದ ಅಂತರದಲ್ಲಿ ಗೆಲ್ಲಿಸಿರುವುದು ಗಮನಾರ್ಹ ಸಂಗತಿ ಎಂದು ಬಿಜೆಪಿ ರಾಜ್ಯ ವಕ್ತಾರ ಹರಿಪ್ರಕಾಶ್‌ ಕೋಣೆಮನೆ ತಿಳಿಸಿದರು.

ಪಟ್ಟಣದಲ್ಲಿ ಗುರುವಾರ ಸುದ್ದಿಗೋಷ್ಠಿಯಲ್ಲಿ ಮಾತನಾಡಿದ ಅವರು, ನಮ್ಮ ಅಭ್ಯರ್ಥಿ ವಿಶ್ವೇಶ್ವರ ಹೆಗಡೆ ಕಾಗೇರಿಯವರಿಗೆ, ಯಲ್ಲಾಪುರ-ಮುಂಡಗೋಡದಲ್ಲಿ ನಮ್ಮ ನಿರೀಕ್ಷೆಯಂತೆ ಫಲಿತಾಂಶ ಬಂದಿದೆ. ಉತ್ತರ ಕನ್ನಡ ಲೋಕಸಭಾ ಕ್ಷೇತ್ರದಲ್ಲಿ ಬಿಜೆಪಿ ಅಭ್ಯರ್ಥಿ ಆಯ್ಕೆ ಮೊದಲು ಬಹಳ ಚರ್ಚೆಗೆ ಗ್ರಾಸವಾಗಿತ್ತು. ಕಾರ್ಯಕರ್ತರ ಪರಿಶ್ರಮ ಮತ್ತು ಪಕ್ಷದ ನೇತೃತ್ವ, ಸಂಘಟನೆಗಳಿಂದ ಬಿಜೆಪಿಯ ವೈಚಾರಿಕತೆ ಮತದಾರರನ್ನು ತಲುಪಿದೆ. ಉತ್ತರ ಕನ್ನಡ ಜಿಲ್ಲೆಯ ಮತದಾರರು ಪ್ರಬುದ್ಧರಾಗಿ ಮತ ಚಲಾವಣೆ ಮಾಡಿದ್ದಾರೆ ಎಂದು ಹೇಳಿದರು.

ಇದನ್ನೂ ಓದಿ: Karnataka Weather : ಭಾರಿ ಮಳೆಗೆ ಶ್ರೀನಿವಾಸಪುರದ ರೈಲ್ವೆ ಅಂಡರ್‌ ಪಾಸ್‌ ಜಲಾವೃತ; ಇನ್ನೈದು ದಿನ ಭಾರಿ ವರ್ಷಧಾರೆ

ದೇಶದಲ್ಲಿ 63 ಕೋಟಿ ಜನ ಮತದಾರರಿಂದ ಮತ ಚಲಾವಣೆಯಾಗಿದೆ. 76 ದಿನ ಪ್ರಚಾರ ಮಾಡಲಾಗಿದೆ. ವಿಶ್ವವೇ ಕುತೂಹಲದಿಂದ ನಿರೀಕ್ಷಿಸುತ್ತಿದ್ದ ಚುನಾವಣೆ ಮುಕ್ತಾಯವಾಗಿ ಫಲಿತಾಂಶ ಬಂದಿದೆ. ದೇಶ ಮತ್ತು ಜಗತ್ತು ಗಮನ ಸೆಳೆದ ಚುನಾವಣೆಯಲ್ಲಿ ನರೇಂದ್ರ ಮೋದಿ ಮೂರನೇ ಬಾರಿ ಪ್ರಧಾನಿ ಆಗುವ ಕಡೆಗೆ ಹೆಜ್ಜೆ ಇಡುತ್ತಿರುವುದು ಹೆಮ್ಮೆಯ ಸಂಗತಿ. ಈ ಬಾರಿ ಚುನಾವಣೆಯಲ್ಲಿ ಇವಿಎಂ ಮೇಲೆ ಆರೋಪ ಮಾಡಿಲ್ಲ, ಮೋದಿಯವರು ಗೆದ್ದರು, ಇವಿಎಂ ಕೂಡ ಗೆದ್ದಿತು. ಒಟ್ಟಾರೆ ಪ್ರಜಾಪ್ರಭುತ್ವ ವ್ಯವಸ್ಥೆ ಗೆದ್ದಿದೆ. ಮೋದಿ ಮತ್ತೆ ಪ್ರಧಾನಮಂತ್ರಿ ಆಗುತ್ತಾರೆ, ಸ್ಥಿರ ಸರ್ಕಾರ ಕೊಡಲಿದ್ದಾರೆ ಎಂದು ಕೋಣೆಮನೆ ಹೇಳಿದರು.

ಬಿಜೆಪಿ ಮಂಡಲಾಧ್ಯಕ್ಷ ಪ್ರಸಾದ ಹೆಗಡೆ ಮಾತನಾಡಿ, ಯಲ್ಲಾಪುರ ಹಾಗೂ ಪ್ರತಿ ಗ್ರಾಮ ಪಂಚಾಯಿತಿ ಸೇರಿದಂತೆ ಶೇಕಡಾ 90% ಬೂತ್‌ಗಳಲ್ಲಿ ಲೀಡ್‌ ಗಳಿಸಿದ್ದೇವೆ. ಪಕ್ಷ ಹಾಗೂ ಕಾರ್ಯಕರ್ತರ ನೇತೃತ್ವದಲ್ಲಿ ಸದೃಢವಾಗಿ ವಿಶ್ವಾಸದೊಂದಿಗೆ ಚುನಾವಣಾ ಎದುರಿಸಿದ್ದೇವೆ ಎಂದು ಹೇಳಿದರು.

ಚುನಾವಣಾ ಸಂದರ್ಭದಲ್ಲಿ ನಮ್ಮ ಶಾಸಕರು ಬಿಜೆಪಿ ಪರವಾಗಿ ನಿಲ್ಲದೇ ಇರುವಂತಹ ಸಂದರ್ಭದಲ್ಲಿ ಕಾರ್ಯಕರ್ತರ ನೇತೃತ್ವವೇ ನಮ್ಮ ನಾಯಕತ್ವವೆಂದು ನಂಬಿ, ಚುನಾವಣೆ ಎದುರಿಸಿ, ಯಲ್ಲಾಪುರ ತಾಲೂಕಿನಲ್ಲಿ 14,708 ಮತಗಳನ್ನು ಪಡೆದಿದ್ದೇವೆ. ವಿಶ್ವಾಸದೊಂದಿಗೆ ಪಕ್ಷವನ್ನು ಸಂಘಟಿಸಿದ್ದೇವೆ ಮತ್ತು ಮುಂದೆಯೂ ಸಂಘಟಿಸುತ್ತೇವೆ. ಈ ಗೆಲುವಿಗೆ ಕಾರಣೀಕರ್ತರಾದ ಪಕ್ಷದ ಕಾರ್ಯಕರ್ತರಿಗೆ, ಮತದಾರರಿಗೆ ಹಾಗೂ ನಮಗೆ ಸಹಕಾರ ನೀಡಿದ ಮಾಧ್ಯಮಕ್ಕೆ ಕೃತಜ್ಞತೆಗಳು ಎಂದರು.

ಬಿಜೆಪಿ ಪಕ್ಷದಲ್ಲಿದ್ದೂ, ಸೋತ ಸಂಸದರಾದ ಡಿ.ಕೆ ಸುರೇಶ್‌ ಅವರನ್ನು ಸಮಾಧಾನ ಮಾಡಲು ಹೋದ ನಮ್ಮ ಶಾಸಕರ ನಡೆಯನ್ನು ಯಲ್ಲಾಪುರ ಮಂಡಲದಿಂದ ಖಂಡಿಸುತ್ತೇವೆ ಎಂದು ಅವರು ತಿಳಿಸಿದರು.

ಇದನ್ನೂ ಓದಿ: Money Guide: ಈ ಯೋಜನೆಯಲ್ಲಿ ಪ್ರತಿ ತಿಂಗಳು 3,475 ರೂ. ಹೂಡಿಕೆ ಮಾಡಿ 1 ಲಕ್ಷ ರೂ. ಮಾಸಿಕ ಪಿಂಚಣಿ ಪಡೆಯಿರಿ

ಈ ಸಂದರ್ಭದಲ್ಲಿ ಬಿಜೆಪಿ ವಿವಿಧ ಘಟಕಗಳ ಪ್ರಮುಖರಾದ ಗಣಪತಿ ಮಾನಿಗದ್ದೆ, ಗಣಪತಿ ಬೋಳುಗುಡ್ಡೆ, ಸೋಮೇಶ್ವರ ನಾಯ್ಕ, ಪ್ರದೀಪ ಯಲ್ಲಾಪುರಕರ, ವಿಘ್ನೇಶ ಭಟ್ಟ ಮಾಳಕೊಪ್ಪ, ರವಿ ದೇವಡಿಗ, ಬಜ್ಜು ಪಿಂಗಳೆ ಇದ್ದರು.

Continue Reading

ಪ್ರಮುಖ ಸುದ್ದಿ

Lok Sabha Election : ಶತಕ ಬಾರಿಸಿದ ಕಾಂಗ್ರೆಸ್​​; ಪಕ್ಷೇತರನ ಬೆಂಬಲದೊಂದಿಗೆ ಕಾಂಗ್ರೆಸ್​ನ ಸೀಟ್​ಗಳ ಸಂಖ್ಯೆ 100ಕ್ಕೆ ಏರಿಕೆ

Lok Sabha Election : ಉದ್ಧವ್ ಠಾಕ್ರೆ ಈ ಸ್ಥಾನವನ್ನು ಕಾಂಗ್ರೆಸ್​ಗೆ ಬಿಟ್ಟುಕೊಡಲು ನಿರಾಕರಿಸಿದ್ದರು. ಹೀಗಾಗಿ ಪಾಟಿಲ್​ ಪಕ್ಷೇತರರಾಗಿ ಸ್ಪರ್ಧಿಸಿದ್ದರು. ಅವರು ತಮ್ಮ ಸಮೀಪದ ಬಿಜೆಪಿಯ ಸಂಜಯ್ ಪಾಟೀಲ್ ಅವರನ್ನು 1,00,053 ಮತಗಳಿಂದ ಸೋಲಿ ಸಿದ್ದರು. ಇಲ್ಲಿ ಶಿವಸೇನೆ ಅಭ್ಯರ್ಥಿ ಚಂದ್ರಹರ್ ಪಾಟೀಲ್ ಕೇವಲ 60,860 ಮತಗಳನ್ನು ಪಡೆದಿದ್ದರು.

VISTARANEWS.COM


on

Lok Sabha Election
Koo

ನವದೆಹಲಿ: ಲೋಕ ಸಭಾ ಚುನಾವಣೆಯಲ್ಲಿ (Lok Sabha Election) ಮಹಾರಾಷ್ಟ್ರದಲ್ಲಿ ಸ್ವತಂತ್ರವಾಗಿ ಸ್ಪರ್ಧಿಸಿದ್ದ ಗೆದ್ದಿದ್ದ ಸಂಸದರೊಬ್ಬರು ಗುರುವಾರ ಕಾಂಗ್ರೆಸ್ ಅಧ್ಯಕ್ಷ ಮಲ್ಲಿಕಾರ್ಜುನ ಖರ್ಗೆ ಅವರನ್ನು ಭೇಟಿಯಾಗಿ ಆ ಪಕ್ಷಕ್ಕೆ ಸೇರ್ಪಡೆಗೊಂಡಿದ್ದಾರೆ. ಹೀಗಾಗಿ ಹಳೆ ಪಕ್ಷದ ಒಟ್ಟು ಸದಸ್ಯರ 100ಕ್ಕೆ ಏರಿಕೆಯಾಗಿದೆ. ಈ ಮೂಲಕ ಕಾಂಗ್ರೆಸ್ ಪಕ್ಷ ಶತಕದ ಸಂಭ್ರವನ್ನಾಚರಿಸಿದೆ. ಲೋಕಸಭಾ ಚುನಾವಣೆಗೆ ಸೀಟು ಹಂಚಿಕೆ ಒಪ್ಪಂದದ ಅಡಿಯಲ್ಲಿ ಮಹಾ ವಿಕಾಸ್ ಅಘಾಡಿ ಮೈತ್ರಿ ಪಾಲುದಾರ ಶಿವಸೇನೆ (ಯುಬಿಟಿ) ಗೆ ಟಿಕೆಟ್​ ನೀಡಿದ್ದಕ್ಕೆ ಬೇಸರಗೊಂಡಿದ್ದ ಕಾಂಗ್ರೆಸ್ ಮುಖಂಡ ವಿಶಾಲ್ ಪಾಟೀಲ್ ಸಾಂಗ್ಲಿಯಿಂದ ಸ್ವತಂತ್ರ ಅಭ್ಯರ್ಥಿಯಾಗಿ ಸ್ಪರ್ಧಿಸಿ ಗೆದ್ದಿದ್ದರು. ಇದೀಗ ಅವರು ಮಾತೃಪಕ್ಷಕ್ಕೆ ವಾಪಸಾಗಿರುವ ಕಾರಣ ಕಾಂಗ್ರೆಸ್ ಸದಸ್ಯರ ಸಂಖ್ಯೆ ಹೆಚ್ಚಿದೆ.

ಉದ್ಧವ್ ಠಾಕ್ರೆ ಈ ಸ್ಥಾನವನ್ನು ಕಾಂಗ್ರೆಸ್​ಗೆ ಬಿಟ್ಟುಕೊಡಲು ನಿರಾಕರಿಸಿದ್ದರು. ಹೀಗಾಗಿ ಪಾಟಿಲ್​ ಪಕ್ಷೇತರರಾಗಿ ಸ್ಪರ್ಧಿಸಿದ್ದರು. ಅವರು ತಮ್ಮ ಸಮೀಪದ ಬಿಜೆಪಿಯ ಸಂಜಯ್ ಪಾಟೀಲ್ ಅವರನ್ನು 1,00,053 ಮತಗಳಿಂದ ಸೋಲಿ ಸಿದ್ದರು. ಇಲ್ಲಿ ಶಿವಸೇನೆ ಅಭ್ಯರ್ಥಿ ಚಂದ್ರಹರ್ ಪಾಟೀಲ್ ಕೇವಲ 60,860 ಮತಗಳನ್ನು ಪಡೆದಿದ್ದರು.

ಮಹಾರಾಷ್ಟ್ರದ ಜನರು ದ್ರೋಹ, ಅಹಂಕಾರ ಮತ್ತು ವಿಭಜನೆಯ ರಾಜಕೀಯವನ್ನು ಸೋಲಿಸಿದ್ದಾರೆ. ಸಾಮಾಜಿಕ ನ್ಯಾಯ, ಸಮಾನತೆ ಮತ್ತು ಸ್ವಾತಂತ್ರ್ಯಕ್ಕಾಗಿ ಹೋರಾಡಿದ ಛತ್ರಪತಿ ಶಿವಾಜಿ ಮಹಾರಾಜ್, ಮಹಾತ್ಮ ಜ್ಯೋತಿಬಾ ಫುಲೆ ಮತ್ತು ಬಾಬಾ ಸಾಹೇಬ್ ಡಾ.ಅಂಬೇಡ್ಕರ್ ಅವರಂತಹ ನಮ್ಮ ಪ್ರೇರಣಾದಾಯಕ ನಾಯಕರಿಗೆ ಇದು ಸೂಕ್ತ ಗೌರವವಾಗಿದೆ. ಸಾಂಗ್ಲಿಯ ಚುನಾಯಿತ ಸಂಸದ ಶ್ರೀ ವಿಶಾಲ್ ಪಾಟೀಲ್ (@patilvishalvp) ಅವರು ಕಾಂಗ್ರೆಸ್ ಪಕ್ಷಕ್ಕೆ ನೀಡಿದ ಬೆಂಬಲವನ್ನು ಸ್ವಾಗತಿಸುತ್ತೇನೆ. ಸಂವಿಧಾನ ದೀರ್ಘಕಾಲ ಸುರಕ್ಷಿತವಾಗಿರಲಿ ಎಂದು ಬರೆಯಲಾಗಿದೆ.

ಪಾಟೀಲ್ ಅವರ ಬೆಂಬಲವು ಲೋಕಸಭೆಯಲ್ಲಿ 99 ಸ್ಥಾನಗಳನ್ನು ಗೆದ್ದ ಕಾಂಗ್ರೆಸ್​ಗೆ ಗಮನಾರ್ಹ ಉತ್ತೇಜನ ಸಿಕ್ಕಿದೆ. ಈ ಪಕ್ಷ ಹಿಂದಿನ ಚುನಾವಣೆಯಲ್ಲಿ ಪಡೆದಿದ್ದ 52 ರಿಂದ ತನ್ನ ಸಂಖ್ಯೆಯನ್ನು ದುಪ್ಪಟ್ಟು ಮಾಡಿದೆ. ಕಾಂಗ್ರೆಸ್ ಮತ್ತು ಅದರ ಮಿತ್ರಪಕ್ಷಗಳು ಮಹಾರಾಷ್ಟ್ರದ 48 ಸ್ಥಾನಗಳಲ್ಲಿ 30 ಸ್ಥಾನಗಳನ್ನು ಗೆದ್ದಿವೆ. ಮತ್ತೊಂದೆಡೆ, ಬಿಜೆಪಿ-ಎನ್ಸಿಪಿ-ಶಿವಸೇನೆ ಮಹಾಯುತಿ ಮೈತ್ರಿಕೂಟವು ಕೇವಲ 17 ಸ್ಥಾನಗಳನ್ನು ಗಳಿಸಿತ್ತು.

ಇದನ್ನೂ ಓದಿ: Kangana Ranaut : ಪಂಜಾಬ್​ನಲ್ಲಿ ಭಯೋತ್ಪಾದನೆ ಹೆಚ್ಚುತ್ತಿದೆ; ತಮ್ಮ ಮೇಲೆ ಹಲ್ಲೆ ನಡೆಸಿದ ಬಗ್ಗೆ ಕಂಗನಾ ಪ್ರತಿಕ್ರಿಯೆ ಹೀಗಿತ್ತು

ಲೋಕಸಭಾ ಚುನಾವಣಾ ಫಲಿತಾಂಶದ ಬಗ್ಗೆ ಚರ್ಚಿಸಲು ಇಂಡಿಯಾ ಬಣದ ಸದಸ್ಯರು ಬುಧವಾರ ರಾಷ್ಟ್ರ ರಾಜಧಾನಿಯಲ್ಲಿ ಸಭೆ ಸೇರಿದರು. “ನಮ್ಮ ಮೈತ್ರಿಕೂಟಕ್ಕೆ ದೊರೆತ ಅಪಾರ ಬೆಂಬಲಕ್ಕಾಗಿ ಇಂಡಿಯಾ ಬಣದ ಘಟಕಗಳು ಭಾರತದ ಜನರಿಗೆ ಧನ್ಯವಾದ ಅರ್ಪಿಸುತ್ತವೆ. ಜನಾದೇಶವು ಬಿಜೆಪಿ ಮತ್ತು ಅವರ ದ್ವೇಷ ಮತ್ತು ಭ್ರಷ್ಟಾಚಾರದ ರಾಜಕೀಯಕ್ಕೆ ಸೂಕ್ತ ಉತ್ತರ ನೀಡಿದೆ” ಎಂದು ಖರ್ಗೆ ಸಭೆಯ ನಂತರ ಹೇಳಿದರು.

“ಇದು ಭಾರತದ ಸಂವಿಧಾನವನ್ನು ರಕ್ಷಿಸಲು ಮತ್ತು ಬೆಲೆ ಏರಿಕೆ, ನಿರುದ್ಯೋಗ ಮತ್ತು ಕ್ರೋನಿ ಕ್ಯಾಪಿಟಲಿಸಂ ವಿರುದ್ಧ ಮತ್ತು ಪ್ರಜಾಪ್ರಭುತ್ವವನ್ನು ಉಳಿಸಲು ಜನಾದೇಶವಾಗಿದೆ. ಮೋದಿ ನೇತೃತ್ವದ ಬಿಜೆಪಿಯ ಫ್ಯಾಸಿಸ್ಟ್ ಆಡಳಿತದ ವಿರುದ್ಧ ಭಾರತ ಬಣವು ಹೋರಾಟವನ್ನು ಮುಂದುವರಿಸುತ್ತದೆ” ಎಂದು ಅವರು ಹೇಳಿದರು.

Continue Reading

ಪ್ರಮುಖ ಸುದ್ದಿ

Kangana Ranaut: ಕಂಗನಾಗೆ ಮಹಿಳಾ ಪೇದೆ ಹೊಡೆಯಲು ಕಾರಣವೇನು? ರೈತರ ಬಗ್ಗೆ ಅವರು ನೀಡಿದ ವಿವಾದಾತ್ಮಕ ಹೇಳಿಕೆ ಏನು?

Kangana Ranaut : 2020 ರಲ್ಲಿ, ಕಂಗನಾ ರನೌತ್ ಪ್ರತಿಭಟನೆಯಲ್ಲಿ ಭಾಗವಹಿಸುತ್ತಿದ್ದ ಪಂಜಾಬ್​ನ ಮಹಿಳೆಯೊಬ್ಬರನ್ನು ತಪ್ಪಾಗಿ ಅಂದಾಜಿಸಿದ್ದರು. ಅದಕ್ಕಿಂತ ಹಿಂದೆ ಶಾಹೀನ್ ಬಾಗ್​ನಲ್ಲಿ ನಡೆದ ಪೌರತ್ವ ತಿದ್ದುಪಡಿ ಕಾನೂನು (ಸಿಎಎ) ವಿರೋಧಿ ಪ್ರತಿಭಟನೆಯಲ್ಲಿ ಭಾಗಿಯಾಗಿದ್ದ ಬಿಲ್ಕಿಸ್ ಬಾನೊ ಅವರು ಎಂದುಕೊಂಡಿದ್ದರು. ಪ್ರತಿಭಟನೆಗೆ ಬರುವ ಮಹಿಳೆಯರೆಲ್ಲರೂ 100 ರೂಪಾಯಿಗೆ ಸಿಗುತ್ತಾರೆ ಎಂದು ಹೇಳಿದ್ದರು.

VISTARANEWS.COM


on

Kangana Ranaut
Koo

ನವದೆಹಲಿ: ಲೋಕ ಸಭಾ ಚುನಾವಣೆಯಲ್ಲಿ ಹಿಮಾಚಲ ಪ್ರದೇಶದ ಮಂಡಿಯಿಂದ ಸಂಸದರಾಗಿ ಆಯ್ಕೆಯಾದ ಕಂಗನಾ ರಣಾವತ್​ (Kangana Ranaut), 2020-21 ರಲ್ಲಿ ನಡೆದ ರೈತರ ಪ್ರತಿಭಟನೆಯ ಬಗ್ಗೆ ಹಿಂದೆ ನೀಡಿದ ಹೇಳಿಕೆಯಿಂದ ಕೆರಳಿದ್ದ ಚಂಡೀಗಢ ವಿಮಾನ ನಿಲ್ದಾಣದಲ್ಲಿ ಕೇಂದ್ರ ಕೈಗಾರಿಕಾ ಭದ್ರತಾ ಪಡೆ (ಸಿಐಎಸ್ಎಫ್) ಮಹಿಳಾ ಸಿಬ್ಬಂದಿಯೊಬ್ಬರು ಗುರುವಾರ ಅವರು ಎದುರು ಸಿಕ್ಕಾಗ ಕಪಾಳಮೋಕ್ಷ ಮಾಡಿದ್ದರು. ನಟಿ ಹಾಗೂ ಸಂಸದೆಯ ವಿರುದ್ಧ ಕೈ ಮಾಡಿದ ಕುಲ್ವಿಂದರ್​ ಕೌರ್​ ವಿ ರುದ್ದ ಪ್ರಕರಣ ದಾಖಲಾಗಿದೆ. ಇದೇ ವೇಳೆ ನಟಿ ಈ ಹಿಂದೆ ನೀಡಿದ್ದ ಹೇಳಿಕೆಯೂ ಮುನ್ನೆಲೆಗೆ ಬಂದಿದೆ.

ನರೇಂದ್ರ ಮೋದಿ ಸರ್ಕಾರವು ಕೃಷಿ ಕ್ಷೇತ್ರಕ್ಕೆ ಸಂಬಂಧಿಸಿದ ಮೂರು ಕಾನೂನುಗಳನ್ನ ಜಾರಿಗೆ ತರಲು ಮುಂದಾದಾಗ ಅದರ ವಿರುದ್ಧ ಆಂದೋಲನ ನಡೆಸುತ್ತಿದ್ದ ಪ್ರತಿಭಟನಾಕಾರರನ್ನು ‘ಖಲಿಸ್ತಾನಿ ಬೆಂಬಲಿಗರು’ ಎಂದು ಒಂದು ಗುಂಪು ಕರೆದಿತ್ತು. ಈ ವಿವಾದಕ್ಕೆ ಈಡಾದಾಗ ಕಂಗಾನಾ ಆ ಗಾಯಕ್ಕೆ ಉಪ್ಪು ಸವರುವಂಥ ಹೇಳಿಕೆ ನೀಡಿದ್ದರು.

2020 ರಲ್ಲಿ, ಕಂಗನಾ ರನೌತ್ ಪ್ರತಿಭಟನೆಯಲ್ಲಿ ಭಾಗವಹಿಸುತ್ತಿದ್ದ ಪಂಜಾಬ್​ನ ಮಹಿಳೆಯೊಬ್ಬರನ್ನು ತಪ್ಪಾಗಿ ಅಂದಾಜಿಸಿದ್ದರು. ಅದಕ್ಕಿಂತ ಹಿಂದೆ ಶಾಹೀನ್ ಬಾಗ್​ನಲ್ಲಿ ನಡೆದ ಪೌರತ್ವ ತಿದ್ದುಪಡಿ ಕಾನೂನು (ಸಿಎಎ) ವಿರೋಧಿ ಪ್ರತಿಭಟನೆಯಲ್ಲಿ ಭಾಗಿಯಾಗಿದ್ದ ಬಿಲ್ಕಿಸ್ ಬಾನೊ ಅವರು ಎಂದುಕೊಂಡಿದ್ದರು. ಪ್ರತಿಭಟನೆಗೆ ಬರುವ ಮಹಿಳೆಯರೆಲ್ಲರೂ 100 ರೂಪಾಯಿಗೆ ಸಿಗುತ್ತಾರೆ ಎಂದು ಹೇಳಿದ್ದರು. ಇದು ದೊಡ್ಡ ವಿವಾದ ಸೃಷ್ಟಿಸಿತ್ತು. ಅಂದ ಹಾಗೆ ಕಂಗನಾಗೆ ಹೊಡೆದ ಕಾನ್​ಸ್ಟೇಬಲ್​ ಕುಲ್ವಿಂದರ್ ಕೌರ್​ ತಾಯಿಯೂ ಆ ಪ್ರತಿಭಟನೆಯಲ್ಲಿ ಭಾಗವಹಿಸಿದ್ದರು. ಕಂಗನಾ ಹೇಳಿಕೆಯಿಂದ ಕೋಪಗೊಂಡಿದ್ದ ಅವರು ಪ್ರತಿಕಾರ ತೀರಿಸಲು ಕಾದಿದ್ದರು. ಅಂತೆಯೇ ಚಂಡಿಗಢದಲ್ಲಿ ತಪಾಸಣಾ ಕೇಂದ್ರಕ್ಕೆ ಬರುತ್ತಿದ್ದಂತೆ ಕಪಾಳ ಮೋಕ್ಷ ಮಾಡಿದ್ದಾರೆ.

100 ರೂಪಾಯಿಗೆ ಸಿಗುವ ಮಹಿಳೆಯರು ಎಂದು ಕಂಗನಾ ಕೊಟ್ಟಿರುವ ಹೇಳಿಕೆಯು ಎಕ್ಸ್ ನಲ್ಲಿ(ಟ್ವಿಟರ್​) ಕಂಗನಾ ಮತ್ತು ಗಾಯಕ-ನಟ ದಿಲ್ಜೀತ್ ದೋಸಾಂಜ್ ನಡುವೆ ಗಲಾಟೆಗೆ ಕಾರಣವಾಗಿತ್ತು.

ರಿಹಾನ್ನಾ ಬಗ್ಗೆಯೂ ಟೀಕೆ

ಫೆಬ್ರವರಿ 2021 ರಲ್ಲಿ, ಅಂತರರಾಷ್ಟ್ರೀಯ ಪಾಪ್ ಸೆನ್ಸೇಷನ್ ರಿಹಾನ್ನಾ ಅವರು ಪ್ರತಿಭಟನೆಗೆ ಬೆಂಬಲ ಸೂಚಿಸಿದ್ದರು. ಅದಕ್ಕೆ ಪ್ರತಿಕ್ರಿಯಿಸಿದ್ದ ಕಂಗನಾ ರನೌತ್ ಪ್ರತಿಭಟನಾಕಾರರನ್ನು “ಭಯೋತ್ಪಾದಕರು” ಎಂದು ಕರೆದಿದ್ದರು ಮತ್ತು ಅವರು ಭಾರತವನ್ನು ವಿಭಜಿಸಲು ಪ್ರಯತ್ನಿಸುತ್ತಿದ್ದಾರೆ ಎಂದು ಹೇಳಿಕೆ ನೀಡಿದ್ದರು.

ಇದನ್ನೂ ಓದಿ: Stock market Crash : ಜೂ. 4ರ ಷೇರುಪೇಟೆ ಕುಸಿತ ಮೋದಿ, ಅಮಿತ್​ ಶಾ ನಡೆಸಿದ ಮಹಾ ಹಗರಣ; ರಾಹುಲ್ ಗಾಂಧಿ ಆರೋಪ

ರಿಹಾನ್ನಾ ಅವರ ಎಕ್ಸ್​ ಪೋಸ್ಟ್​ಗೆ ಉತ್ತರಿಸಿದ ಕಂಗನಾ ರನೌತ್ ” ಅವರು ರೈತರಲ್ಲ, ಅವರು ಭಾರತವನ್ನು ವಿಭಜಿಸಲು ಪ್ರಯತ್ನಿಸುತ್ತಿರುವ ಭಯೋತ್ಪಾದಕರು. ಇವರಿಂದಾಗಿ ದುರ್ಬಲವಾಗುತ್ತಿರುವ ನಮ್ಮ ದೇಶವನ್ನು ಚೀನಾ ಸ್ವಾಧೀನಪಡಿಸಿಕೊಳ್ಳಬಹುದು. ಚೀನಾದ ವಸಾಹತು ಮಾಡಬಹುದು. ನೀವು ನಮ್ಮ ಬಗ್ಗೆ ಹೇಳಲು ಬರಬೇಡಿ ಎಂದು ಹೇಳಿಕೆ ನೀಡಿದ್ದರು.

ರಿಹಾನ್ನಾ ವಿರುದ್ಧದ ಮತ್ತು ₹ 100 ಪೋಸ್ಟ್​​ಗಳನ್ನು ಕಂಗನಾ ರಣಾವತ್​ ಅಳಿಸಿದ್ದರು. 2021 ರ ಡಿಸೆಂಬರ್​ನಲ್ಲಿ ಕೃಷಿ ಕಾನೂನುಗಳನ್ನು ರದ್ದುಪಡಿಸಲಾಯಿತು ಮತ್ತು ಕೆಲವು ದಿನಗಳ ನಂತರ, ರೈತರ ವಿರುದ್ಧದ ಹೇಳಿಕೆಗಳಿಗೆ ಕ್ಷಮೆಯಾಚಿಸುವಂತೆ ಒತ್ತಾಯಿಸಿ ಪ್ರತಿಭಟನಾಕಾರರು ಕಂಗನಾ ಅರ ಕಾರನ್ನು ಪಂಜಾಬ್​ನ ಕಿರಾತ್ಪುರ್ ಸಾಹಿಬ್​ನಲ್ಲಿ ತಡೆದಿದ್ದರು.

ಕಂಗನಾ ಪ್ರತಿಕ್ರಿಯೆ ಏನು?

ನಾನು ಸುರಕ್ಷಿತವಾಗಿದ್ದೇನೆ. ವಿಮಾನ ನಿಲ್ದಾಣದಲ್ಲಿ ಭದ್ರತಾ ತಪಾಸಣೆಯ ಸಮಯದಲ್ಲಿ ಈ ಘಟನೆ ನಡೆದಿದೆ. ತಪಾಸಣೆ ಮುಗಿದ ಕ್ಷಣ, ಬೇರೆ ಕ್ಯಾಬಿನ್​ನಲ್ಲಿದ್ದ ಸಿಐಎಸ್ಎಫ್​​ನ ಮಹಿಳಾ ಕಾನ್​ಸ್ಟೆಬಲ್​ ನನ್ನ ಬಳಿಗೆ ಬಂದು ನನ್ನ ಮುಖಕ್ಕೆ ಬದಿಯಿಂದ ಹೊಡೆದು ನಿಂದಿಸಿದಳು. ನೀವು ಇದನ್ನು ಏಕೆ ಮಾಡಿದ್ದೀರಿ ಎಂದು ನಾನು ಅವಳನ್ನು ಕೇಳಿದೆ. ಆಕೆ ರೈತರ ಪ್ರತಿಭಟನೆ ಬಗ್ಗೆ ನಾನು ನೀಡಿದ ಹೇಳಿಕೆಗಾಗಿ ಅಂದಳು ಎಂದು ನಟಿ ತಮ್ಮ ಹೇಳಿಕೆಯಲ್ಲಿ ತಿಳಿಸಿದ್ದಾರೆ.

ಪಂಜಾಬ್​​ನಲ್ಲಿ ಭಯೋತ್ಪಾದನೆ ಹೆಚ್ಚುತ್ತಿದೆ. ಇದನ್ನು ಹೇಗೆ ನಿಭಾಯಿಸಬೇಕು ಎಂಬುದು ನನಗೆ ಕಳವಳಕಾರಿಯಾಗಿದೆ ಎಂದೂ ಕಂಗನಾ ಹೇಳಿದ್ದಾರೆ.

Continue Reading
Advertisement
love sex dhoka koppala
ಕ್ರೈಂ2 mins ago

Love Sex Dhoka: ಪ್ರೀತಿಸುವ ನಾಟಕವಾಡಿ ವಿಡಿಯೋ ಮಾಡಿ ಬ್ಲ್ಯಾಕ್‌ಮೇಲ್‌; ಯುವಕನ ಬಂಧನಕ್ಕಾಗಿ ಪೊಲೀಸ್‌ ಠಾಣೆ ಮುಂದೆ ಯುವತಿ ಧರಣಿ

karnataka weather Forecast
ಮಳೆ1 hour ago

Karnataka Weather : ಗುಡುಗು ಸಹಿತ ಭಾರಿ ಮಳೆ; ಇಂದಿನಿಂದ 5 ದಿನ ಮೀನುಗಾರರು ಸಮುದ್ರಕ್ಕೆ ಇಳಿಯುವಂತಿಲ್ಲ

pulses benefits
ಆರೋಗ್ಯ2 hours ago

Pulses Benefits: ಬೇಳೆಕಾಳುಗಳಲ್ಲಿರುವ ಎಲ್ಲ ಪೋಷಕಾಂಶಗಳು ದೇಹಕ್ಕೆ ಸೇರಬೇಕಾದರೆ ಹೀಗೆ ಮಾಡಿ!

dry fruits
ಆಹಾರ/ಅಡುಗೆ3 hours ago

Dry Fruits: ಈ ಒಣಹಣ್ಣುಗಳನ್ನು ಬೆಳಗ್ಗೆ ಎದ್ದ ಕೂಡಲೇ ತಿನ್ನುವುದು ಒಳ್ಳೆಯದಲ್ಲ!

Dina Bhavishya
ಭವಿಷ್ಯ3 hours ago

Dina Bhavishya :‌ ನಂಬಿಕೆ ಇಟ್ಟು ಕಾರ್ಯದಲ್ಲಿ ಮುನ್ನುಗ್ಗಿ ಯಶಸ್ಸು ಗ್ಯಾರಂಟಿ

T 20 Wordl Cup
ಕ್ರೀಡೆ5 hours ago

T20 World Cup : ಕ್ರಿಕೆಟ್​ ಕೂಸು ಅಮೆರಿಕ ತಂಡದ ವಿರುದ್ಧ ಸೋತ ಪಾಕಿಸ್ತಾನ

Stock Market Crash
ಪ್ರಮುಖ ಸುದ್ದಿ8 hours ago

Stock Market Crash : ವಿದೇಶಿ ಹೂಡಿಕೆಗಳು ಬರದಂತೆ ರಾಹುಲ್ ಗಾಂಧಿ ಪಿತೂರಿ ಮಾಡುತ್ತಿದ್ದಾರೆ; ಬಿಜೆಪಿಯಿಂದ ತಿರುಗೇಟು

sunil chhetri
ಪ್ರಮುಖ ಸುದ್ದಿ8 hours ago

Sunil Chhetri : ಕಣ್ಣೀರು ಹಾಕುತ್ತಲೇ ಕೊನೇ ಅಂತಾರಾಷ್ಟ್ರೀಯ ಪಂದ್ಯವಾಡಿ ವಿದಾಯ ಹೇಳಿದ ಸುನಿಲ್​ ಛೆಟ್ರಿ

Shri Bhandara Keri Mutt Shri Vidyesh Theertha Swamiji ashirvachan
ಕರ್ನಾಟಕ9 hours ago

Mysore News: ಅಧ್ಯಯನದಲ್ಲಿ ಆನಂದ ಕಾಣುವವರು ಮಾತ್ರ ಉನ್ನತ ಮಟ್ಟದ ಜ್ಞಾನಾರ್ಜನೆ ಮಾಡಲು ಸಾಧ್ಯ: ಶ್ರೀ ವಿದ್ಯೇಶ ತೀರ್ಥ ಸ್ವಾಮೀಜಿ

Gadag News
ಕರ್ನಾಟಕ9 hours ago

Gadag News : ಕ್ಷುಲ್ಲಕ ಕಾರಣಕ್ಕೆ ಗಲಾಟೆ, ಮನೆಗಳಿಗೆ ನುಗ್ಗಿ ದೊಣ್ಣೆ, ಬಡಿಗೆಗಳಿಂದ ಹಲ್ಲೆ

Sharmitha Gowda in bikini
ಕಿರುತೆರೆ8 months ago

Geetha Serial Kannada: ನಿದ್ದೆ ಕದ್ದ ಚೋರಿ! ನಟಿ `ಭಾನುಮತಿ’ ಹಾಟ್‌ ಪೋಟೊಗಳಿಗೆ ಫ್ಯಾನ್ಸ್ ಫುಲ್ ಫಿದಾ

Kannada Serials
ಕಿರುತೆರೆ8 months ago

Kannada Serials TRP: 2ನೇ ಸ್ಥಾನದಲ್ಲಿ 2 ಧಾರಾವಾಹಿಗಳು; ಟಿಆರ್‌ಪಿ ರೇಸ್‌ನಲ್ಲಿಲ್ಲ ಭಾಗ್ಯಲಕ್ಷ್ಮೀ!

Bigg Boss- Saregamapa 20 average TRP
ಕಿರುತೆರೆ8 months ago

Kannada Serials TRP: ಏಳನೇ ಸ್ಥಾನಕ್ಕೆ ʻಅಮೃತಧಾರೆʼ ಕುಸಿತ; ಬಿಗ್‌ ಬಾಸ್‌-ಸರಿಗಮಪ ಟಿಆರ್‌ಪಿ ಎಷ್ಟು?

galipata neetu
ಕಿರುತೆರೆ6 months ago

Kanyadana Serial: ಕಿರುತೆರೆಗೆ ಮತ್ತೆ ಎಂಟ್ರಿ ಕೊಟ್ಟ ʻಗಾಳಿಪಟʼ ಖ್ಯಾತಿಯ ʻನೀತುʼ!

Kannada Serials
ಕಿರುತೆರೆ8 months ago

Kannada Serials TRP: ನಾಲ್ಕನೇ ಸ್ಥಾನಕ್ಕೆ ಕುಸಿತ ಕಂಡ ʻಸೀತಾ ರಾಮʼ; ಟಿಆರ್‌ಪಿ ರೇಸ್‌ಗೆ ʻಭಾಗ್ಯಲಕ್ಷ್ಮಿʼ ಬ್ಯಾಕ್‌!

Kannada Serials
ಕಿರುತೆರೆ8 months ago

Kannada Serials TRP: ಟಿಆರ್‌ಪಿಯಲ್ಲಿ ʻಭಾಗ್ಯಲಕ್ಷ್ಮೀʼ ಹವಾ; ʻಪುಟ್ಟಕ್ಕನ ಮಕ್ಕಳುʼ ಧಾರಾವಾಹಿಗೆ ಸಂಕಷ್ಟ!

Bigg Boss' dominates TRP; Sita Rama fell to the sixth position
ಕಿರುತೆರೆ7 months ago

Kannada Serials TRP: ಟಿಆರ್‌ಪಿಯಲ್ಲಿ ʻಬಿಗ್ ಬಾಸ್ʼದೇ ಮೇಲುಗೈ; 6ನೇ ಸ್ಥಾನಕ್ಕೆ ಕುಸಿದ ʻಸೀತಾ ರಾಮʼ

geetha serial Dhanush gowda engagement
ಕಿರುತೆರೆ6 months ago

Dhanush Gowda: ಗೀತಾ ಧಾರಾವಾಹಿ ನಟನ ನಿಶ್ಚಿತಾರ್ಥ; ಭವ್ಯಾಳ ಕಮೆಂಟ್‌ ಬಾಕ್ಸ್‌ ಆಫ್‌!

varun
ಕಿರುತೆರೆ7 months ago

Brindavana Serial: ʼಬೃಂದಾವನʼ ಧಾರಾವಾಹಿಯಲ್ಲಿ ದೊಡ್ಡ ಟ್ವಿಸ್ಟ್‌; ಪ್ರಮುಖ ಪಾತ್ರಧಾರಿಯೇ ಬದಲು

Kannada Serials
ಕಿರುತೆರೆ9 months ago

Kannada Serials TRP: ಟಿಆರ್‌ಪಿಯಲ್ಲಿ ಏರಿಕೆ ಕಂಡ ʻಅಮೃತಧಾರೆʼ; ʻಗಟ್ಟಿಮೇಳʼಕ್ಕೆ ನಾಲ್ಕನೇ ಸ್ಥಾನ!

Karnataka Rain
ಮಳೆ19 hours ago

Karnataka Rain : ಭಾರಿ ಮಳೆಗೆ ಮರ ಬಿದ್ದು ಮೇಕೆಗಳು ಸಾವು; ಸಿಡಿಲಿಗೆ ಎಲೆಕ್ಟ್ರಿಕ್‌ ಅಂಗಡಿ ಸುಟ್ಟು ಭಸ್ಮ

Lok Sabha Election Result 2024 Live
ದೇಶ3 days ago

Lok Sabha Election Result 2024 Live: ಲೋಕಸಭೆ ಚುನಾವಣೆ ಫಲಿತಾಂಶದ ಲೈವ್‌ ಇಲ್ಲಿ ವೀಕ್ಷಿಸಿ

Karnataka Rain
ಮಳೆ4 days ago

Karnataka Rain : 133 ವರ್ಷದ ರೆಕಾರ್ಡ್ ಬ್ರೇಕ್ ಮಾಡಿದ ʻಬೆಂಗಳೂರು ಮಳೆʼ

Snake Rescue Snakes spotted in heavy rain
ಮಳೆ4 days ago

Snake Rescue: ಮಳೆ ನೀರಿನಲ್ಲಿ ಹರಿದು ಬಂದು ಬೈಕ್‌ನಲ್ಲಿ ಸೇರಿಕೊಂಡ ಹಾವು; ಮನೆಗಳಲ್ಲೂ ಪ್ರತ್ಯಕ್ಷ

Karnataka Rain
ಮಳೆ5 days ago

Karnataka Rain : ವೀಕೆಂಡ್‌ ಮೋಜಿಗೆ ವರುಣ ಅಡ್ಡಿ; ಭಾನುವಾರ ಸಂಜೆಗೆ ಮಳೆ ಕಾಟ

Liquor ban
ಬೆಂಗಳೂರು6 days ago

Liquor Ban : ಮುಂದಿನ ಏಳು ದಿನಗಳಲ್ಲಿ ನಾಲ್ಕೂವರೆ ದಿನ ಬಾರ್ ಕ್ಲೋಸ್; ಎಣ್ಣೆ ಸಿಗೋದು ಯಾವ ದಿನ?

Assault Case in Shivamogga
ಕ್ರೈಂ1 week ago

Assault Case : ಶಿವಮೊಗ್ಗದಲ್ಲಿ ಮತ್ತೆ ಬಾಲ ಬಿಚ್ಚಿದ ಪುಂಡರು; ಗಾಂಜಾ ನಶೆಯಲ್ಲಿ ವಾಹನಗಳು ಪೀಸ್‌ ಪೀಸ್‌

Karnataka weather Forecast
ಮಳೆ1 week ago

Karnataka Weather : ಚಿಕ್ಕಮಗಳೂರಲ್ಲಿ ಭಾರಿ ಮಳೆ; ಯಾದಗಿರಿಯಲ್ಲಿ ಕರೆಂಟ್‌ ಕಟ್‌, ಜನರೇಟರ್‌ನಿಂದ ಮೊಬೈಲ್‌ಗಳಿಗೆ ಚಾರ್ಜಿಂಗ್‌!

tumkur murder
ತುಮಕೂರು1 week ago

Tumkur Murder : ಮಗುವಿನ ಮುಂದೆಯೇ ಹೆಂಡತಿಯ ಕತ್ತು, ದೇಹವನ್ನು ಕತ್ತರಿಸಿ ಬಿಸಾಡಿದ ದುಷ್ಟ

Karnataka Weather Forecast
ಮಳೆ2 weeks ago

Karnataka Weather : ಕಡಲತೀರದಲ್ಲಿ ಅಲೆಗಳ ಅಬ್ಬರ, ಪ್ರವಾಸಿಗರಿಗೆ ಕಟ್ಟೆಚ್ಚರ; ನಾಳೆಯೂ ಗಾಳಿ ಸಹಿತ ಮಳೆ ಅಬ್ಬರ

ಟ್ರೆಂಡಿಂಗ್‌