Russia Ukraine War: ರಷ್ಯಾ ಸೇನೆಯಲ್ಲಿರುವ ಭಾರತೀಯರು ಶೀಘ್ರ ತಾಯ್ನಾಡಿಗೆ; ವಿದೇಶಾಂಗ ಸಚಿವಾಲಯದ ಭರವಸೆ - Vistara News

ವಿದೇಶ

Russia Ukraine War: ರಷ್ಯಾ ಸೇನೆಯಲ್ಲಿರುವ ಭಾರತೀಯರು ಶೀಘ್ರ ತಾಯ್ನಾಡಿಗೆ; ವಿದೇಶಾಂಗ ಸಚಿವಾಲಯದ ಭರವಸೆ

Russia Ukraine War: ರಷ್ಯಾ ಸೇನೆಯಲ್ಲಿರುವ 20 ಭಾರತೀಯ ಸೈನಿಕರನ್ನು ಮರಳಿ ಕರೆತರಲು ಸಾಧ್ಯವಾದಷ್ಟು ಎಲ್ಲ ಪ್ರಯತ್ನ ಮಾಡುತ್ತಿರುವುದಾಗಿ ವಿದೇಶಾಂಗ ಸಚಿವಾಲಯ ತಿಳಿಸಿದೆ.

VISTARANEWS.COM


on

Russia Ukraine War
ಮಹತ್ವದ, ಕುತೂಹಲಕರ ಸುದ್ದಿಗಾಗಿ ಫಾಲೊ ಮಾಡಿ
Koo

ನವದೆಹಲಿ: ರಷ್ಯಾ-ಉಕ್ರೇನ್‌ ಯುದ್ಧ (Russia Ukraine War) ಮುಂದುವರಿದಿದೆ. ಈ ಮಧ್ಯೆ ರಷ್ಯಾ ಸೇನೆಯಲ್ಲಿ ಕನಿಷ್ಠ 20 ಭಾರತೀಯರಿದ್ದು ಅವರನ್ನು ತಾಯ್ನಾಡಿಗೆ ಮರಳಿ ಕರೆತರುವ ಪ್ರಯತ್ನ ನಡೆಸುತ್ತಿದ್ದೇವೆ ಎಂದು ವಿದೇಶಾಂಗ ಸಚಿವಾಲಯ (Ministry of External Affairs) ಗುರುವಾರ ತಿಳಿಸಿದೆ. ʼʼಈ ಎಲ್ಲ ಭಾರತೀಯರನ್ನು ಕರೆತರಲು ಭಾರತ ಸರ್ಕಾರ ರಷ್ಯಾದ ಅಧಿಕಾರಿಗಳೊಂದಿಗೆ ನಿರಂತರ ಸಂಪರ್ಕದಲ್ಲಿದ್ದು, ಮಾತುಕತೆ ನಡೆಸುತ್ತಿದೆʼʼ ಎಂದು ವಕ್ತಾರ ರಣಧೀರ್ ಜೈಸ್ವಾಲ್ ತಿಳಿಸಿದರು.

ʼʼಈ ಭಾರತೀಯರನ್ನು ಶೀಘ್ರವಾಗಿ ಬಿಡುಗಡೆಗೊಳಿಸಲು ಭಾರತ ಸರ್ಕಾರ ತೀವ್ರವಾಗಿ ಶ್ರಮಿಸುತ್ತಿದೆʼʼ ಎಂದು ಒತ್ತಿ ಹೇಳಿದ ರಣಧೀರ್ ಜೈಸ್ವಾಲ್, ʼʼರಷ್ಯಾದಲ್ಲಿರುವ ಭಾರತೀಯರಿಗೆ ಯುದ್ಧ ವಲಯಕ್ಕೆ ಹೋಗದಂತೆ ಎಚ್ಚರಿಕೆ ನೀಡಲಾಗಿದೆʼʼ ಎಂದು ಹೇಳಿದರು. “ರಷ್ಯಾದ ಸೈನ್ಯದಲ್ಲಿ ಸಹಾಯಕ ಸಿಬ್ಬಂದಿಯಾಗಿ ಅಥವಾ ಸಹಾಯಕರಾಗಿ ಕೆಲಸ ಮಾಡಲು ಈ 20 ಮಂದಿ ಅಲ್ಲಿಗೆ ಹೋಗಿದ್ದರು. ಇವರು ನಮ್ಮನ್ನು ಸಂಪರ್ಕಿಸಿ ತಾಯ್ನಾಡಿಗೆ ಮರಳಲು ಸಹಾಯ ಕೋರಿದ್ದಾರೆ” ಎಂದು ಮಾಹಿತಿ ನೀಡಿದರು.

ಫೆಬ್ರವರಿ 26ರಂದು, 2022ರ ರಷ್ಯಾ-ಉಕ್ರೇನ್‌ ಯುದ್ಧದಲ್ಲಿ ಸಿಕ್ಕಿಬಿದ್ದ ಹಲವು ಭಾರತೀಯರನ್ನು ಈಗಾಗಲೇ ರಷ್ಯಾದ ಸೈನ್ಯದಿಂದ ಬಿಡುಗಡೆ ಮಾಡಲಾಗಿದೆ ಎಂದು ಎಂಇಎ ಹೇಳಿದೆ. “ಮಾಸ್ಕೋದಲ್ಲಿರುವ ಭಾರತೀಯ ರಾಯಭಾರ ಕಚೇರಿ ಮತ್ತು ನವದೆಹಲಿಯ ರಷ್ಯಾ ರಾಯಭಾರ ಕಚೇರಿಯೊಂದಿಗೆ ಫಲಪ್ರದ ಮಾತುಕತೆ ನಡೆಸಿದ ಪರಿಣಾಮ ಹಲವು ಭಾರತೀಯರನ್ನು ಈಗಾಗಲೇ ಬಿಡುಗಡೆ ಮಾಡಲಾಗಿದೆ” ಎಂದು ಎಂಇಎ ತಿಳಿಸಿದೆ. ರಷ್ಯಾದ ಸೈನಿಕರಾಗಿ ನಿಯುಕ್ತಿಗೊಂಡ ಜಮ್ಮು ಮತ್ತು ಕಾಶ್ಮೀರಕ್ಕೆ ಸೇರಿದ ಇಬ್ಬರು ಯುವಕರ ಕುಟುಂಬಗಳು ಇತ್ತೀಚೆಗೆ ಅವರನ್ನು ಮರಳಿ ಕರೆತರಲು ಸಹಾಯ ಮಾಡುವಂತೆ ವಿದೇಶಾಂಗ ವ್ಯವಹಾರಗಳ ಸಚಿವಾಲಯಕ್ಕೆ ಮನವಿ ಸಲ್ಲಿಸಿತ್ತು.

ಪೋಷಕರು ಹೇಳಿದ್ದೇನು?

ʼʼಭಾರತೀಯ ಯುವಕರಿಗೆ ಹಣದ ಆಮಿಷವೊಡ್ಡಿ, ಅವರನ್ನು ಸೇನೆಯ ಏಜೆಂಟ್‌ಗಳನ್ನಾಗಿ ರಷ್ಯಾ ನೇಮಕ ಮಾಡಿಕೊಂಡಿದೆ. ಇವರನ್ನು ರಕ್ಷಿಸಿ, ಭಾರತಕ್ಕೆ ಕಳುಹಿಸಬೇಕುʼʼ ಎಂದು ಯುವಕರ ಪೋಷಕರು ಹೇಳಿದ್ದಾರೆ. ಈ ಬಗ್ಗೆ ಮಾಹಿತಿ ನೀಡಿದ್ದ ರಣಧೀರ್ ಜೈಸ್ವಾಲ್, “ರಷ್ಯಾ ಸೇನೆಯ ಸಹಾಯಕರಾಗಿ ಭಾರತದ ಕೆಲ ಯುವಕರನ್ನು ನೇಮಿಸಲಾಗಿದೆ ಎಂಬುದು ಗೊತ್ತಾಗಿದೆ. ರಷ್ಯಾ ಅಧಿಕಾರಿಗಳ ಜತೆ ಈ ಕುರಿತು ಭಾರತದ ಅಧಿಕಾರಿಗಳು ಮಾತುಕತೆ ನಡೆಸುತ್ತಿದ್ದಾರೆ. ಭಾರತದ ಯುವಕರು ರಷ್ಯಾ ಸೇನೆಗೆ ನೆರವು ನೀಡುವ ಮುನ್ನ ಎಚ್ಚರದಿಂದ ಇರಬೇಕು” ಎಂದು ಹೇಳಿದ್ದರು.

ಇದನ್ನೂ ಓದಿ: ರಷ್ಯಾ-ಉಕ್ರೇನ್​ ನಾಯಕರ ನಡುವೆ ಶಾಂತಿ ಮಾತುಕತೆ ಸಾಧ್ಯವಾಗಿಸಲು ಭಾರತದ ಪ್ರಧಾನಿಯಿಂದ ಮಾತ್ರ ಸಾಧ್ಯ ಎಂದ ಫ್ರೆಂಚ್​ ಪತ್ರಕರ್ತೆ

ವಾಯು ದಾಳಿಗೆ ಭಾರತದ ಯುವಕ ಬಲಿ

ರಷ್ಯಾದಲ್ಲಿ ಉಕ್ರೇನ್‌ ಮಾಡಿದ ಡ್ರೋನ್‌ ದಾಳಿಯಲ್ಲಿ 4 ದಿನಗಳ ಹಿಂದೆ ಭಾರತ ಮೂಲದ ಯುವಕನೊಬ್ಬ ಮೃತಪಟ್ಟಿದ್ದಾನೆ. ರಷ್ಯಾ ಹಾಗೂ ಉಕ್ರೇನ್‌ ಗಡಿಯಲ್ಲಿ ನಡೆದ ಈ ದಾಳಿಯಲ್ಲಿ ಭಾರತದ 23 ವರ್ಷದ ಯುವಕ ಮೃತಪಟ್ಟಿದ್ದಾನೆ ಎಂದು ಮೂಲಗಳು ತಿಳಿಸಿವೆ. ಮೃತನನ್ನು ಗುಜರಾತ್‌ನ ಸೂರತ್‌ ಜಿಲ್ಲೆಯ ಹೇಮಿಲ್‌ ಅಶ್ವಿನ್‌ಭಾಯಿ ಮಂಗುಕಿಯಾ ಎಂದು ಗುರುತಿಸಲಾಗಿದೆ. ರಷ್ಯಾದ ಸೇನೆಯ ಸಹಾಯಕನಾಗಿ 2023ರ ಡಿಸೆಂಬರ್‌ನಲ್ಲಿ ಈತ ಸೇರ್ಪಡೆಯಾಗಿದ್ದ. ಈತನು ಸೇನೆಯ ಏಜೆಂಟ್‌ ಆಗಿ ಕೆಲಸ ಮಾಡುತ್ತಿದ್ದ ಎಂದು ಮೂಲಗಳು ತಿಳಿಸಿವೆ. ರಷ್ಯಾದಲ್ಲಿ ನಿಗದಿತ ಗುರಿಗಳ ಮೇಲೆ ಉಕ್ರೇನ್‌ ವಾಯುದಾಳಿ ನಡೆಸಿದೆ. ದಾಳಿಯಲ್ಲಿ ಭಾರತದ ಹಲವರು ಸಂಕಷ್ಟಕ್ಕೆ ಸಿಲುಕಿದ್ದಾರೆ ಎನ್ನಲಾಗಿದೆ.

ಈ ಸಂಗತಿಯ ಕುರಿತು ನಿಮ್ಮ ಅನಿಸಿಕೆ ಏನು? ಕಾಮೆಂಟ್ ಮೂಲಕ ತಿಳಿಸಿ

ಕ್ಷಣ ಕ್ಷಣದ ಮಾಹಿತಿಗಾಗಿ Vistara News FaceBook ಪೇಜ್ ಫಾಲೋ ಮಾಡಿ
ಮಹತ್ವದ ಮಾಹಿತಿಗಾಗಿ ವಿಸ್ತಾರ ನ್ಯೂಸ್ ಆ್ಯಪ್ ಉಚಿತವಾಗಿ ಡೌನ್ ಲೋಡ್ ಮಾಡಿಕೊಳ್ಳಿ: Andriod App | IOS App
Continue Reading
Click to comment

Leave a Reply

Your email address will not be published. Required fields are marked *

ದೇಶ

AAP Funds: ನಿಯಮ ಉಲ್ಲಂಘಿಸಿ ಬೇರೆ ದೇಶಗಳಿಂದ ಆಪ್‌ 7 ಕೋಟಿ ರೂ. ದೇಣಿಗೆ ಸ್ವೀಕಾರ; ಇ.ಡಿ ಸ್ಫೋಟಕ ಮಾಹಿತಿ!

AAP Funds: 2014ರಿಂದ 2022ರ ಅವಧಿಯಲ್ಲಿ ಆಮ್‌ ಆದ್ಮಿ ಪಕ್ಷಕ್ಕೆ ಬೇರೆ ದೇಶಗಳಿಂದ 7.08 ಕೋಟಿ ರೂ. ದೇಣಿಗೆ ಹರಿದುಬಂದಿದೆ. ಆದರೆ, ಇಷ್ಟು ಹಣ ಸ್ವೀಕರಿಸಲು ಆಪ್‌ ಎಫ್‌ಸಿಆರ್‌ಎ ನಿಯಮಗಳನ್ನು ಪಾಲಿಸಿಲ್ಲ. ಪಕ್ಷಕ್ಕೆ ಅಮೆರಿಕ, ಕೆನಡಾ, ಆಸ್ಟ್ರೇಲಿಯಾ ಸೇರಿ ಹಲವು ದೇಶಗಳಿಂದ ನಿಯಮಗಳನ್ನು ಪಾಲಿಸದೆಯೇ ದೇಣಿಗೆ ಪಡೆಯಲಾಗಿದೆ ಎಂದು ಕೇಂದ್ರ ಗೃಹ ಸಚಿವಾಲಯಕ್ಕೆ ಇ.ಡಿ ಮಾಹಿತಿ ನೀಡಿದೆ.

VISTARANEWS.COM


on

AAP Funds
Koo

ನವದೆಹಲಿ: ರಾಷ್ಟ್ರ ರಾಜಧಾನಿ ದೆಹಲಿ ಮುಖ್ಯಮಂತ್ರಿ ಅರವಿಂದ್‌ ಕೇಜ್ರಿವಾಲ್‌ (Arvind Kejriwal) ಅವರಿಗೆ ಮತ್ತೊಂದು ಸಂಕಷ್ಟ ಎದುರಾಗಿದೆ. ದೆಹಲಿಯಲ್ಲಿರುವ ಅರವಿಂದ್‌ ಕೇಜ್ರಿವಾಲ್‌ ನೇತೃತ್ವದ ಆಮ್‌ ಆದ್ಮಿ ಪಾರ್ಟಿಗೆ (AAP) 2014ರಿಂದ 2022ರ ಅವಧಿಯಲ್ಲಿ ಬೇರೆ ಬೇರೆ ದೇಶಗಳಿಂದ 7.08 ಕೋಟಿ ರೂ. ದೇಣಿಗೆ (AAP Funds) ಹರಿದುಬಂದಿದೆ. ಆದರೆ, ದೇಣಿಗೆ ಸ್ವೀಕರಿಸುವಾಗ ಆಮ್‌ ಆದ್ಮಿ ಪಕ್ಷವು ವಿದೇಶಿ ದೇಣಿಗೆ ನಿಯಂತ್ರಣ ಕಾಯ್ದೆ (FCRA) ನಿಯಮಗಳನ್ನು ಉಲ್ಲಂಘಿಸಿದೆ” ಎಂದು ಜಾರಿ ನಿರ್ದೇಶನಾಲಯವು (E.D) ಮಾಹಿತಿ ನೀಡಿದೆ. ಇದು ಈಗ ಪಕ್ಷ ಹಾಗೂ ಅರವಿಂದ್‌ ಕೇಜ್ರಿವಾಲ್‌ ಅವರಿಗೆ ಹೊಸ ಸಂಕಷ್ಟ ತಂದಿದೆ.

ವಿದೇಶಿ ದೇಣಿಗೆ ನಿಯಮಗಳನ್ನು ಆಪ್‌ ಪಾಲಿಸದ ಕುರಿತು ಕೇಂದ್ರ ಗೃಹ ಸಚಿವಾಲಯಕ್ಕೆ ಇ.ಡಿ ಅಧಿಕಾರಿಗಳು ಮಾಹಿತಿ ನೀಡಿದ್ದಾರೆ. “2014ರಿಂದ 2022ರ ಅವಧಿಯಲ್ಲಿ ಆಮ್‌ ಆದ್ಮಿ ಪಕ್ಷಕ್ಕೆ ಬೇರೆ ದೇಶಗಳಿಂದ 7.08 ಕೋಟಿ ರೂ. ದೇಣಿಗೆ ಹರಿದುಬಂದಿದೆ. ಆದರೆ, ಇಷ್ಟು ಹಣ ಸ್ವೀಕರಿಸಲು ಆಪ್‌ ಎಫ್‌ಸಿಆರ್‌ಎ ನಿಯಮಗಳನ್ನು ಪಾಲಿಸಿಲ್ಲ. ಪಕ್ಷಕ್ಕೆ ಅಮೆರಿಕ, ಕೆನಡಾ, ಆಸ್ಟ್ರೇಲಿಯಾ, ನ್ಯೂಜಿಲ್ಯಾಂಡ್‌, ಸೌದಿ ಅರೇಬಿಯಾ, ಕುವೈತ್‌, ಒಮಾನ್‌ ಸೇರಿ ಹಲವು ದೇಶಗಳಿಂದ ಆಪ್‌ ನಿಯಮ ಉಲ್ಲಂಘಿಸಿ ದೇಣಿಗೆ ಸ್ವೀಕರಿಸಿದೆ” ಎಂದು ತಿಳಿಸಿದ್ದಾರೆ.

2021ರಲ್ಲೇ ವಿಚಾರಣೆ ನಡೆದಿತ್ತು

ವಿದೇಶಗಳಿಂದ ದೇಣಿಗೆ ಪಡೆಯುವಾಗ ನಿಯಮ ಉಲ್ಲಂಘಿಸಿದ ಪ್ರಕರಣಕ್ಕೆ ಸಂಬಂಧಿಸಿದಂತೆಯೇ 2021ರ ಸೆಪ್ಟೆಂಬರ್‌ನಲ್ಲಿ ಆಪ್‌ ನಾಯಕ ಪಂಕಜ್‌ ಕುಮಾರ್‌ ಅವರ ವಿಚಾರಣೆ ನಡೆಸಲಾಗಿತ್ತು. ಈಗ, ಆಪ್‌ಗೆ ದೇಣಿಗೆ ನೀಡಿದವರ ಕುರಿತು ತಪ್ಪು ಮಾಹಿತಿ ನೀಡಲಾಗಿದೆ. ದೇಣಿಗೆ ನೀಡಿದವರ ಮಾಹಿತಿಯನ್ನು ಮರೆಮಾಚಲಾಗಿದೆ ಎಂಬುದು ಸೇರಿ ಹಲವು ಆರೋಪಗಳನ್ನು ಇ.ಡಿ ಮಾಡಿದೆ. ಇದರ ಕುರಿತು ಕೇಂದ್ರ ಗೃಹ ಸಚಿವಾಲಯವು ಯಾವ ತೀರ್ಮಾನ ತೆಗೆದುಕೊಳ್ಳಲಿದೆಯೋ ಕಾದು ನೋಡಬೇಕಿದೆ.

ದೆಹಲಿ ಅಬಕಾರಿ ನೀತಿ ಜಾರಿ ವೇಳೆ ನೂರಾರು ಕೋಟಿ ರೂ. ಹಗರಣ ನಡೆದಿದೆ ಎನ್ನಲಾದ ಪ್ರಕರಣದಲ್ಲಿ ಮುಖ್ಯಮಂತ್ರಿ ಅರವಿಂದ್‌ ಕೇಜ್ರಿವಾಲ್‌ ಅವರು ಜೈಲುಪಾಲಾಗಿದ್ದರು. ಅವರೀಗ ಜಾಮೀನಿನ ಮೇಲೆ ಬಿಡುಗಡೆಯಾಗಿದ್ದು, ಜೂನ್‌ 2ರಂದು ಮತ್ತೆ ಜೈಲು ಸೇರಲಿದ್ದಾರೆ. ಆಪ್‌ನ ಹಲವು ಸಚಿವರು ಈಗಾಗಲೇ ಜೈಲಿನಲ್ಲಿದ್ದಾರೆ. ಇನ್ನು ರಾಜ್ಯಸಭೆಯ ಆಪ್‌ ಸದಸ್ಯೆ ಸ್ವಾತಿ ಮಾಲಿವಾಲ್‌ ಅವರ ಮೇಲೆ ಹಲ್ಲೆ ನಡೆಸಿದ ಕಾರಣ ಅರವಿಂದ್‌ ಕೇಜ್ರಿವಾಲ್‌ ಅವರ ಆಪ್ತ ಕಾರ್ಯದರ್ಶಿ ಬಿಭವ್‌ ಕುಮಾರ್‌ ಅವರನ್ನು ಬಂಧಿಸಲಾಗಿದೆ. ಇದರ ಬೆನ್ನಲ್ಲೇ, ಆಪ್‌ಗೆ ಮತ್ತೊಂದು ಸಂಕಷ್ಟ ಎದುರಾಗಿದೆ.

ಉದ್ಯಮಿಗಳಿಂದ 200 ಕೋಟಿ ರೂ. ಸುಲಿಗೆ ಮಾಡಿರುವ ಪ್ರಕರಣಕ್ಕೆ ಸಂಬಂಧಿಸಿ ಜೈಲಿನಲ್ಲಿರುವ ಸುಕೇಶ್‌ ಚಂದ್ರಶೇಖರ್‌, ಆಮ್‌ ಆದ್ಮಿ ಪಕ್ಷಕ್ಕೆ 60 ಕೋಟಿ ರೂ.ಗಳನ್ನು ದೇಣಿಗೆ ನೀಡಿರುವುದಾಗಿ 2022ರಲ್ಲಿ ಹೇಳಿದ್ದ. ಸುಕೇಶ್‌ ಚಂದ್ರಶೇಖರ್‌ ಬಿಜೆಪಿಯ ವಕ್ತಾರನಂತೆ ಮಾತನಾಡುತ್ತಿದ್ದು, ಜೈಲಿನಿಂದ ಬಿಡುಗಡೆಯಾದ ಬಳಿಕ ಆ ಪಕ್ಷ ಸೇರಬಹುದು ಎಂದು ಆಮ್‌ ಆದ್ಮಿ ಈ ಹಿಂದೆ ಟೀಕಿಸಿತ್ತು.

ಇದನ್ನೂ ಓದಿ: Arvind Kejriwal: “ತಾಕತ್‌ ಇದ್ರೆ ಅರೆಸ್ಟ್‌ ಮಾಡಿ…”; ಪ್ರಧಾನಿ ಮೋದಿಗೆ ಕೇಜ್ರಿವಾಲ್‌ ಓಪನ್‌ ಚಾಲೆಂಜ್‌

Continue Reading

ದೇಶ

Ebrahim Raisi: ಇಬ್ರಾಹಿಂ ರೈಸಿ ನಿಧನದಿಂದ ಭಾರತದಲ್ಲಿ ಚಿನ್ನ, ಪೆಟ್ರೋಲ್‌ ಬೆಲೆ ಏರಿಕೆ? ಹೀಗಿದೆ ವಿಶ್ವ ಮಾರುಕಟ್ಟೆ ಸ್ಥಿತಿ-ಗತಿ

Ebrahim Raisi: ಇಬ್ರಾಹಿಂ ರೈಸಿ ಅವರ ನಿಧನದ ಹಿನ್ನೆಲೆಯಲ್ಲಿ ಜಾಗತಿಕ ತೈಲ ಮಾರುಕಟ್ಟೆಯಲ್ಲಂತೂ ಹೆಚ್ಚಿನ ಆತಂಕ ಎದುರಾಗಿದೆ. ಜಾಗತಿಕ ರಾಜಕೀಯ ಹಾಗೂ ಹಣಕಾಸು ಸ್ಥಿತಿಯ ಮೇಲೆ ಇಬ್ರಾಹಿಂ ರೈಸಿ ಸಾವು ಪರಿಣಾಮ ಬೀರಿದೆ. ಇಬ್ರಾಹಿಂ ರೈಸಿ ನಿಧನದಿಂದಾಗಿ ಪ್ರಮುಖ ತೈಲೋತ್ಪಾದಿತ ದೇಶಗಳ ರಾಜಕೀಯ ವ್ಯವಸ್ಥೆ ಮೇಲೆ ಪರಿಣಾಮ ಬೀರುತ್ತಿದೆ. ಇದರಿಂದಾಗಿ ಭಾರತದಲ್ಲೂ ಬೆಲೆಯೇರಿಕೆ ನಿಶ್ಚಿತ ಎಂದು ಹೇಳಲಾಗುತ್ತಿದೆ.

VISTARANEWS.COM


on

Ebrahim Raisi
Koo

ಟೆಹ್ರಾನ್:‌ ಇರಾನ್‌ ಅಧ್ಯಕ್ಷ ಇಬ್ರಾಹಿಂ ರೈಸಿ ಅವರು ಭಾನುವಾರ (ಮೇ 19) ಅಜರ್‌ಬೈಜಾನ್‌ನ (Azerbaijan) ಗುಡ್ಡಗಾಡು ಪ್ರದೇಶದಲ್ಲಿ ನಡೆದ ಹೆಲಿಕಾಪ್ಟರ್‌ ದುರಂತದಲ್ಲಿ ಮೃತಪಟ್ಟಿದ್ದಾರೆ. ಹಂಗಾಮಿ ಅಧ್ಯಕ್ಷರನ್ನಾಗಿ ಮೊಹಮ್ಮದ್‌ ಮೊಖ್‌ಬೈರ್‌ (Mohammad Mokhber) ಅವರನ್ನು ನೇಮಿಸಲಾಗಿದೆ. ಇಬ್ರಾಹಿಂ ರೈಸಿ (Ebrahim Raisi) ನಿಧನದ ಹಿನ್ನೆಲೆಯಲ್ಲಿ ಇರಾನ್‌ನಲ್ಲಿ 5 ದಿನ ಶೋಕಾಚರಣೆ ಘೋಷಿಸಲಾಗಿದೆ. ಭಾರತದಲ್ಲೂ ಒಂದು ದಿನ ಶೋಕಾರಣೆ ಘೋಷಿಸಲಾಗಿದೆ. ಇಬ್ರಾಹಿಂ ರೈಸಿ ನಿಧನದ ಬೆನ್ನಲ್ಲೇ, ಜಾಗತಿಕ ಮಾರುಕಟ್ಟೆಯಲ್ಲಿ ತಲ್ಲಣ ಸೃಷ್ಟಿಯಾಗಿದೆ. ಹೌದು, ಇರಾನ್‌ ಅಧ್ಯಕ್ಷರ ನಿಧನದ ಹಿನ್ನೆಲೆಯಲ್ಲಿ ಜಾಗತಿಕವಾಗಿ ಬಂಗಾರದ ಬೆಲೆ ಜಾಸ್ತಿಯಾಗಿದೆ. ಕೆಲವೇ ದಿನಗಳಲ್ಲಿ ತೈಲ ಹಾಗೂ ಷೇರು ಮಾರುಕಟ್ಟೆ ಮೇಲೆಯೂ ಇದರ ಪರಿಣಾಮ ಆಗಲಿದೆ ಎಂದು ಹೇಳಲಾಗುತ್ತಿದೆ. ಇದು ಭಾರತದ ಮೇಲೂ ಪರಿಣಾಮ ಬೀರಲಿದೆ ಎಂದು ತಜ್ಞರು ಎಚ್ಚರಿಸಿದ್ದಾರೆ.

ಚಿನ್ನದ ಬೆಲೆ ಶೇ.1ರಷ್ಟು ಏರಿಕೆ

ಇಬ್ರಾಹಿಂ ರೈಸಿ ನಿಧನದ ಬೆನ್ನಲ್ಲೇ ಚಿನ್ನದ ಬೆಲೆಯು ಶೇ.1ರಷ್ಟು ಏರಿಕೆಯಾಗಿದೆ. ಜಾಗತಿಕ ಮಾರುಕಟ್ಟೆಯಲ್ಲಿ ಒಂದು ಔನ್ಸ್‌ಗೆ (Ounce) (ಒಂದು ಔನ್ಸ್‌ ಎಂದರೆ 28.3 ಗ್ರಾಂ) 2,438.44 ಡಾಲರ್‌ ಆಗಿದೆ. ಬೆಳ್ಳಿಯ ಬೆಲೆಯೂ ಕಳೆದ 11 ವರ್ಷದಲ್ಲೇ ಗರಿಷ್ಠ ಮಟ್ಟಕ್ಕೆ ತಲುಪಿದೆ. ಜಾಗತಿಕವಾಗಿ ಚಿನ್ನದ ಮಾರುಕಟ್ಟೆಯಲ್ಲಿ ಬೆಲೆ ಜಾಸ್ತಿಯಾದರೆ, ಖಂಡಿತವಾಗಿಯೂ ಭಾರತದಲ್ಲಿ ಚಿನ್ನದ ಬೆಲೆಯೇರಿಕೆ ಆಗಲಿದೆ. ಈಗಾಗಲೇ ಭಾರತದಲ್ಲಿ ಚಿನ್ನದ ಬೆಲೆಯು ಗಗನಕ್ಕೇರಿದ್ದು, ಈಗ ಮತ್ತಷ್ಟು ಏರಿಕೆಯಾಗುವ ಭೀತಿ ಉಂಟಾಗಿದೆ.

ತೈಲ ಮಾರುಕಟ್ಟೆ ಗತಿ ಏನು?

ಇಬ್ರಾಹಿಂ ರೈಸಿ ಅವರ ನಿಧನದ ಹಿನ್ನೆಲೆಯಲ್ಲಿ ಜಾಗತಿಕ ತೈಲ ಮಾರುಕಟ್ಟೆಯಲ್ಲಂತೂ ಹೆಚ್ಚಿನ ಆತಂಕ ಎದುರಾಗಿದೆ. ಜಾಗತಿಕ ರಾಜಕೀಯ ಹಾಗೂ ಹಣಕಾಸು ಸ್ಥಿತಿಯ ಮೇಲೆ ಇಬ್ರಾಹಿಂ ರೈಸಿ ಸಾವು ಪರಿಣಾಮ ಬೀರಿದೆ. ಇಬ್ರಾಹಿಂ ರೈಸಿ ನಿಧನದಿಂದಾಗಿ ಪ್ರಮುಖ ತೈಲೋತ್ಪಾದಿತ ದೇಶಗಳ ರಾಜಕೀಯ ವ್ಯವಸ್ಥೆ ಮೇಲೆ ಪರಿಣಾಮ ಬೀರುತ್ತಿದೆ. ಸೌದಿ ಅರೇಬಿಯಾ ದೊರೆಯು ಜಪಾನ್‌ ಪ್ರವಾಸವನ್ನು ರದ್ದುಗೊಳಿಸಿದ್ದಾರೆ. ಇರಾನ್‌ನಲ್ಲಿಯೂ ಅಧ್ಯಕ್ಷರ ಬದಲಾವಣೆಯಿಂದಾಗಿ ತೈಲದ ಉತ್ಪಾದನೆ ಕುಸಿಯುವ ಸಾಧ್ಯತೆ ಇದೆ.

crude oil

ಹೀಗೆ, ತೈಲ ಉತ್ಪಾದಿಸುವ ದೇಶಗಳಲ್ಲಿ ರಾಜಕೀಯ ಸ್ಥಿತ್ಯಂತರಗಳ ಬದಲಾವಣೆಯಿಂದಾಗಿ ಜಾಗತಿಕ ತೈಲ ಮಾರುಕಟ್ಟೆಯಲ್ಲಿ ತೈಲದ ಬೆಲೆಯು ಏರಿಕೆಯಾಗಲಿದೆ. ಇನ್ನು ಉತ್ಪಾದನೆ ಕಡಿಮೆಯಾಗಿ, ಬೇಡಿಕೆ ಜಾಸ್ತಿಯಾದರೆ ಕಚ್ಚಾತೈಲದ ಬೆಲೆಯು ಗಗನಕ್ಕೇರಲಿದೆ. ಇದರಿಂದ ಸಹಜವಾಗಿಯೇ ಭಾರತದಲ್ಲಿ ಪೆಟ್ರೋಲ್‌ ಹಾಗೂ ಡೀಸೆಲ್‌ ಬೆಲೆಯು ಇನ್ನಷ್ಟು ಏರಿಕೆಯಾಗಲಿದೆ ಎಂದು ವಿಶ್ಲೇಷಿಸಲಾಗುತ್ತಿದೆ. ಚಿನ್ನ, ಇಂಧನದ ಜತೆಗೆ ಷೇರು ಮಾರುಕಟ್ಟೆ ಮೇಲೂ ಪರಿಣಾಮ ಬೀರಲಿದೆ ಎನ್ನಲಾಗುತ್ತಿದೆ.

ಇದನ್ನೂ ಓದಿ: Ebrahim Raisi: ಹೆಲಿಕಾಪ್ಟರ್‌ ದುರಂತಕ್ಕೂ ಮುಂಚಿನ ಇಬ್ರಾಹಿಂ ರೈಸಿ ವಿಡಿಯೋ ವೈರಲ್‌

Continue Reading

ವಿದೇಶ

Air Crashes: ವಿಮಾನ ಅಪಘಾತದಲ್ಲಿ ದಾರುಣವಾಗಿ ಮೃತಪಟ್ಟ 10 ಪ್ರಭಾವಿ ರಾಜಕಾರಣಿಗಳಿವರು

ಇರಾನ್ ಅಧ್ಯಕ್ಷರ ಸಾವು ವಿಶ್ವದಲ್ಲೇ ರಾಜಕೀಯ ನಾಯಕರ ಸುರಕ್ಷತೆಯ ಬಗ್ಗೆ ಮತ್ತೊಮ್ಮೆ ಪ್ರಶ್ನೆ ಮಾಡುವಂತೆ ಮಾಡಿದೆ. ವಿಮಾನ, ಹೆಲಿಕಾಪ್ಟರ್ ಅಪಘಾತದಲ್ಲಿ (Air Crashes) ರಾಜಕೀಯ ನಾಯಕರ ಸಾವು ಇದೇ ಮೊದಲಲ್ಲ. ವಿಶ್ವದ ಹತ್ತು ಪ್ರಮುಖ ನಾಯಕರು ಈ ರೀತಿಯ ದುರಂತದಲ್ಲಿ ಮೃತಪಟ್ಟಿದ್ದಾರೆ.

VISTARANEWS.COM


on

By

Air Crashes
Koo

ಇರಾನ್ ಅಧ್ಯಕ್ಷ (Iran President) ಇಬ್ರಾಹಿಂ ರೈಸಿ (Ebrahim Raisi) ಅವರು ಭಾನುವಾರ ರಾತ್ರಿ ದೇಶದ ಪರ್ವತ ಪ್ರದೇಶದಲ್ಲಿ ಹೆಲಿಕಾಪ್ಟರ್ ಅಪಘಾತದಲ್ಲಿ (Air Crashes) ಸಾವನ್ನಪ್ಪಿದ್ದಾರೆ. ರೈಸಿ ಅವರ ದಣಿವರಿಯದ ಸ್ಫೂರ್ತಿಯ ಸೇವೆಯ ಮಾರ್ಗದಲ್ಲಿ ಮುಂದುವರಿಯುವುದಾಗಿ ಇರಾನ್‌ ಆಡಳಿತ ರಾಷ್ಟ್ರದ ಜನರಿಗೆ ಭರವಸೆ ನೀಡಿದೆ. ವಿಮಾನ ದುರಂತಗಳಲ್ಲಿ ರಾಜಕೀಯ ನಾಯಕರು ಸಾವನ್ನಪ್ಪಿರುವುದು ಇದೇ ಮೊದಲಲ್ಲ. ಈ ಹಿಂದೆಯೂ ಬೇರೆಬೇರೆ ರಾಷ್ಟ್ರಗಳಲ್ಲಿ ಇಂತಹ ಘಟನೆಗಳು ನಡೆದಿವೆ. ಆ ಕುರಿತ ಹಿನ್ನೋಟ ಇಲ್ಲಿದೆ.


ಸ್ವೀಡನ್ ಪ್ರಧಾನಿ ಅರ್ವಿಡ್ ಲಿಂಡ್‌ಮನ್ (1936)

ಸ್ವೀಡನ್‌ನ ಹಿಂದಿನ ಅಡ್ಮಿರಲ್ ಮತ್ತು ಎರಡು ಬಾರಿ ಸ್ವೀಡನ್‌ನ ಪ್ರಧಾನಮಂತ್ರಿ ಆಗಿದ್ದ ಸಾಲೋಮನ್ ಅರ್ವಿಡ್ ಅಚಾಟೆಸ್ ಲಿಂಡ್‌ಮನ್ ಪ್ರಭಾವಿ ಸಂಪ್ರದಾಯವಾದಿ ರಾಜಕಾರಣಿಯಾಗಿದ್ದರು. 1936ರ ಡಿಸೆಂಬರ್ 9ರಂದು ಲಿಂಡ್‌ಮನ್ ಅವರು ಪ್ರಯಾಣಿಸುತ್ತಿದ್ದ ಡಗ್ಲಾಸ್ ಡಿಸಿ-2 ಯುನೈಟೆಡ್ ಕಿಂಗ್‌ಡಂನ ಕ್ರೊಯ್ಡಾನ್ ವಿಮಾನವು ನಿಲ್ದಾಣದ ಬಳಿ ದಟ್ಟವಾದ ಮಂಜಿನಿಂದ ಟೇಕಾಫ್ ಆದ ಸ್ವಲ್ಪ ಸಮಯದ ಅನಂತರ ಮನೆಗಳಿಗೆ ಅಪ್ಪಳಿಸಿದಾಗ ಮೃತಪಟ್ಟರು.

ಫಿಲಿಪೈನ್ಸ್ ಅಧ್ಯಕ್ಷ ರಾಮನ್ ಮ್ಯಾಗ್ಸೆಸೆ (1957)

ಫಿಲಿಪೈನ್ಸ್‌ನ ಏಳನೇ ಅಧ್ಯಕ್ಷ ರಾಮನ್ ಮ್ಯಾಗ್ಸೆಸೆ ಅವರು ತಮ್ಮ ಬಲವಾದ ಭ್ರಷ್ಟಾಚಾರ ವಿರೋಧಿ ನಿಲುವು ಮತ್ತು ಜನಪ್ರಿಯ ಕಾರ್ಯಕ್ಕೆ ಹೆಸರುವಾಸಿಯಾಗಿದ್ದರು. ಅವರ ಅಧ್ಯಕ್ಷತೆಯು 1957ರ ಮಾರ್ಚ್ 17ರಂದು ಥಟ್ಟನೆ ಕೊನೆಗೊಂಡಿತು. “ಮೌಂಟ್ ಪಿನಾಟುಬೊ” ಎಂದು ಕರೆಯಲ್ಪಡುವ ಅವರ ಸಿ-47 ವಿಮಾನವು ಸೆಬು ನಗರದ ಮನುಂಗಲ್ ಪರ್ವತಕ್ಕೆ ಅಪ್ಪಳಿಸಿತು. ಆಗ ಮ್ಯಾಗ್ಸೆಸೆ ಮೃತಪಟ್ಟರು. 25 ಪ್ರಯಾಣಿಕರ ಪೈಕಿ ಒಬ್ಬರು ಮಾತ್ರ ಬದುಕುಳಿದಿದ್ದರು.


ಬ್ರೆಜಿಲ್ ಅಧ್ಯಕ್ಷ ನೆರೆಯು ರಾಮೋಸ್ (1958)

ಬ್ರೆಜಿಲ್‌ನ ಹಂಗಾಮಿ ಅಧ್ಯಕ್ಷರಾಗಿ ಸೇವೆ ಸಲ್ಲಿಸಿದ ನೆರೆಯು ರಾಮೋಸ್ ಅವರು 1958ರ ಜೂನ್ 16ರಂದು ನಿಧನರಾದರು. ರಾಮೋಸ್ ಅವರು ಕ್ರೂಝೈರೊ ಡೊ ಸುಲ್ ವಿಮಾನದಲ್ಲಿ ಪ್ರಯಾಣಿಸುತ್ತಿದ್ದಾಗ ಪರಾನಾ ರಾಜ್ಯದ ಕುರಿಟಿಬಾ ಅಫೊನ್ಸೊ ಪೆನಾ ಅಂತಾರಾಷ್ಟ್ರೀಯ ವಿಮಾನ ನಿಲ್ದಾಣದ ಬಳಿ ಅಪಘಾತಕ್ಕೀಡಾಗಿ ಮೃತಪಟ್ಟರು.

ಇರಾಕ್ ಅಧ್ಯಕ್ಷ ಅಬ್ದುಲ್ ಸಲಾಂ ಆರಿಫ್ (1966)

ಇರಾಕ್‌ನ ಎರಡನೇ ಅಧ್ಯಕ್ಷರಾದ ಅಬ್ದುಲ್ ಸಲಾಂ ಆರಿಫ್ ರಾಜಪ್ರಭುತ್ವವನ್ನು ಉರುಳಿಸಿದ 1958ರ ಕ್ರಾಂತಿಯಲ್ಲಿ ನಿರ್ಣಾಯಕ ಪಾತ್ರ ವಹಿಸಿದರು. 1966ರ ಏಪ್ರಿಲ್ 13ರಂದು ಆರಿಫ್ ಅವರ ಇರಾಕಿ ಏರ್ ಫೋರ್ಸ್ ವಿಮಾನ, ಡಿ ಹ್ಯಾವಿಲ್ಯಾಂಡ್ ಡಿಹೆಚ್ 104 ಡೋವ್, ಬಸ್ರಾ ಬಳಿ ಅಪಘಾತಕ್ಕೀಡಾದಾಗ ನಿಧನರಾದರು. ಅವರ ಸಹೋದರ ಅಬ್ದುಲ್ ರಹಮಾನ್ ಆರಿಫ್ ಅವರ ಅನಂತರ ಅಧ್ಯಕ್ಷರಾದರು.


ಬ್ರೆಜಿಲ್ ಅಧ್ಯಕ್ಷ ಹಂಬರ್ಟೊ ಡಿ ಅಲೆಂಕಾರ್ ಕ್ಯಾಸ್ಟೆಲೊ ಬ್ರಾಂಕೊ (1967)

ಬ್ರೆಜಿಲ್‌ನ 26ನೇ ಅಧ್ಯಕ್ಷ ಮತ್ತು ಮಾಜಿ ಮಿಲಿಟರಿ ಸರ್ವಾಧಿಕಾರದ ಪ್ರಮುಖ ವ್ಯಕ್ತಿಯಾಗಿದ್ದ ಹಂಬರ್ಟೊ ಡಿ ಅಲೆಂಕಾರ್ ಕ್ಯಾಸ್ಟೆಲೊ ಬ್ರಾಂಕೊ 1967ರ ಜುಲೈ 18ರಂದು ನಿಧನರಾದರು. ಅವರ ಅಧ್ಯಕ್ಷೀಯ ಅವಧಿ ಮುಗಿದ ಸ್ವಲ್ಪ ಸಮಯದ ಅನಂತರ ಕ್ಯಾಸ್ಟೆಲೊ ಬ್ರಾಂಕೋ ಅವರ ಪೈಪರ್ ಪಿಎ -23 ಅಜ್ಟೆಕ್ ವಿಮಾನ ಬ್ರೆಜಿಲಿಯನ್ ವಾಯುಪಡೆ ವಿಮಾನಕ್ಕೆ ಡಿಕ್ಕಿ ಹೊಡೆದು ದುರಂತ ಸಂಭವಿಸಿತು. ಅವರ ಸಾವು ಭಾರಿ ಚರ್ಚೆಗೆ ಕಾರಣವಾಗಿತ್ತು.

ಇಂದಿರಾ ಗಾಂಧಿ ಮಗ ಸಂಜಯ್ ಗಾಂಧಿ (1980)

ಮಾಜಿ ಪ್ರಧಾನಿ ಇಂದಿರಾ ಗಾಂಧಿಯವರ ಪುತ್ರ ಸಂಜಯ್ ಗಾಂಧಿ 1980ರ ಜೂನ್ 23ರಂದು ವಿಮಾನ ಅಪಘಾತದಲ್ಲಿ ನಿಧನರಾದರು. ದೆಹಲಿಯ ಸಫ್ದರ್‌ಜಂಗ್ ವಿಮಾನ ನಿಲ್ದಾಣದಲ್ಲಿ ತಾವು ಚಲಾಯಿಸುತ್ತಿದ್ದ ವಿಮಾನದ ನಿಯಂತ್ರಣವನ್ನು ಕಳೆದುಕೊಂಡು ದುರಂತ ಸಾವು ಕಂಡರು.


ಲೆಬನಾನ್ ಪ್ರಧಾನಿ ರಶೀದ್ ಕರಾಮಿ (1987)

ಲೆಬನಾನ್‌ನ ಅತಿ ಹೆಚ್ಚು ಬಾರಿ ಚುನಾಯಿತರಾದ ಪ್ರಧಾನಮಂತ್ರಿ ರಶೀದ್ ಕರಾಮಿ ಅವರು ಲೆಬನಾನಿನ ಅಂತರ್ಯುದ್ಧದ ಸಮಯದಲ್ಲಿ ಪ್ರಮುಖ ವ್ಯಕ್ತಿಯಾಗಿದ್ದರು. 1987ರ ಜೂನ್ 1ರಂದು, ಬೈರುತ್‌ಗೆ ಹೋಗುವ ಮಾರ್ಗದಲ್ಲಿ ಅವರ ಹೆಲಿಕಾಪ್ಟರ್‌ನಲ್ಲಿ ಬಾಂಬ್ ಸ್ಫೋಟಗೊಂಡು ಕರಾಮಿ ಕೊಲ್ಲಲ್ಪಟ್ಟರು.

ಪಾಕಿಸ್ತಾನದ ಅಧ್ಯಕ್ಷ ಮುಹಮ್ಮದ್ ಜಿಯಾ-ಉಲ್-ಹಕ್ (1988)

ಪಾಕಿಸ್ತಾನದ ಆರನೇ ಅಧ್ಯಕ್ಷರಾದ ಜನರಲ್ ಮುಹಮ್ಮದ್ ಜಿಯಾ-ಉಲ್-ಹಕ್ ಅವರು 1988ರ ಆಗಸ್ಟ್ 17ರಂದು ನಿಧನರಾದರು. ಅವರು ಪ್ರಯಾಣಿಸುತ್ತಿದ್ದ ಸಿ-130 ಹರ್ಕ್ಯುಲಸ್ ವಿಮಾನವು ಬಹವಾಲ್‌ಪುರದಿಂದ ಟೇಕಾಫ್ ಆದ ಸ್ವಲ್ಪ ಸಮಯದ ಅನಂತರ ಅಪಘಾತಕ್ಕೀಡಾಯಿತು. ಅಪಘಾತದ ಕಾರಣವು ಇನ್ನೂ ನಿಗೂಢವಾಗಿಯೇ ಉಳಿದಿದೆ.

ಇದನ್ನೂ ಓದಿ: Ebrahim Raisi: ಹೆಲಿಕಾಫ್ಟರ್‌ ಪತನದಲ್ಲಿ ಇರಾನ್ ಅಧ್ಯಕ್ಷ ಇಬ್ರಾಹಿಂ ರೈಸಿ ಮೃತ್ಯು; ವಿಧ್ವಂಸಕ ಕೃತ್ಯವೇ?


ಕಾಂಗ್ರೆಸ್‌ ನಾಯಕ ಮಾಧವರಾವ್ ಸಿಂಧಿಯಾ (2001)

ಮಾಧವರಾವ್ ಸಿಂಧಿಯಾ ಭಾರತದ ಪ್ರಮುಖ ರಾಜಕಾರಣಿ ಮತ್ತು ಕಾಂಗ್ರೆಸ್ ನಾಯಕರಾಗಿದ್ದರು. 2001ರ ಸೆಪ್ಟೆಂಬರ್ 30ರಂದು ವಿಮಾನ ಅಪಘಾತದಲ್ಲಿ ದಾರುಣ ಅಂತ್ಯ ಕಂಡರು. ಉತ್ತರ ಪ್ರದೇಶದ ಮೈನ್‌ಪುರಿ ಬಳಿ ಅವರ ಖಾಸಗಿ ಬೀಚ್‌ಕ್ರಾಫ್ಟ್ ಕಿಂಗ್ ಏರ್ ಸಿ 90 ಗಾಳಿಯಲ್ಲಿ ಬೆಂಕಿ ಹೊತ್ತಿಕೊಂಡು ಅಪಘಾತ ಸಂಭವಿಸಿತ್ತು.

ಚಿಲಿಯ ಅಧ್ಯಕ್ಷ ಸೆಬಾಸ್ಟಿಯನ್ ಪಿನೆರಾ (2024)

ಚಿಲಿಯ ಮಾಜಿ ಅಧ್ಯಕ್ಷರಾದ ಸೆಬಾಸ್ಟಿಯನ್ ಪಿಮೆರಾ ಅವರು ಫೆಬ್ರವರಿ 2024ರಲ್ಲಿ ನಿಧನರಾದರು. ಪಿನೆರಾ ಅವರ ಹೆಲಿಕಾಪ್ಟರ್ ದಕ್ಷಿಣ ಚಿಲಿಯ ಸರೋವರಕ್ಕೆ ಅಪ್ಪಳಿಸಿತು. ಈ ದುರಂತದಲ್ಲಿ ಅವರು ಪ್ರಾಣ ಕಳೆದುಕೊಂಡರು. ಅವರು ಸತತ ಎರಡು ಬಾರಿ ಅಧ್ಯಕ್ಷರಾಗಿ ಸೇವೆ ಸಲ್ಲಿಸಿದ್ದರು.

ಆಂಧ್ರಪ್ರದೇಶ ಮುಖ್ಯಮಂತ್ರಿಯಾಗಿದ್ದ ವೈ ಎಸ್‌ ರಾಜಶೇಖರ್‌ ರೆಡ್ಡಿ ಅವರೂ ಹೆಲಿಕಾಪ್ಟರ್‌ ಅಪಘಾತದಲ್ಲಿ ಮೃತಪಟ್ಟಿದ್ದರು.

Continue Reading

ವಿದೇಶ

ಇಸ್ರೇಲ್‌ ಪಿಎಂ ಬೆಂಜಮಿನ್‌ ನೆತನ್ಯಾಹು, ಹಮಾಸ್‌ ಉಗ್ರರಿಗೆ ಜಾಗತಿಕ ಕೋರ್ಟ್‌ ಅರೆಸ್ಟ್‌ ವಾರೆಂಟ್! ಶೀಘ್ರ ಬಂಧನ?

ಕಳೆದ ಏಳು ತಿಂಗಳಲ್ಲಿ ಇಸ್ರೇಲ್‌ ಹಾಗೂ ಪ್ಯಾಲೆಸ್ತೀನ್‌ನಲ್ಲಿ ನಡೆದ ಹಿಂಸಾಚಾರ, ಮಾನವ ಹಕ್ಕುಗಳ ದಮನ, ಪ್ರಾದೇಶಿಕ ಅಸ್ಥಿರತೆಗೆ ಧಕ್ಕೆ ತಂದ ಹಿನ್ನೆಲೆಯಲ್ಲಿ ಬೆಂಜಮಿನ್‌ ನೆತನ್ಯಾಹು ಸೇರಿ ಹಲವರ ವಿರುದ್ಧ ಅರೆಸ್ಟ್‌ ವಾರೆಟ್‌ ಹೊರಡಿಸಬೇಕು ಎಂಬುದಾಗಿ ಐಸಿಸಿ ಆದೇಶಿಸಿದೆ ಎಂದು ಕೋರ್ಟ್‌ನ ಮುಖ್ಯ ಪ್ರಾಸಿಕ್ಯೂಟರ್‌ ಆಗಿರುವ ಕರೀಮ್‌ ಖಾನ್‌ ಮಾಹಿತಿ ನೀಡಿದ್ದಾರೆ.

VISTARANEWS.COM


on

Benjamin Netanyhu
Koo

ಹೇಗ್:‌ ಕಳೆದ ಅಕ್ಟೋಬರ್‌ನಿಂದಲೂ ಗಾಜಾ ನಗರದ ಮೇಲೆ ಇಸ್ರೇಲ್‌ ಪ್ರತಿದಾಳಿ ಮಾಡುತ್ತಿದೆ. ಹಮಾಸ್‌ ಉಗ್ರರ ದಾಳಿಗೆ ಪ್ರತಿಯಾಗಿ ಇಸ್ರೇಲ್‌ ದಾಳಿ ನಡೆಸುತ್ತಿದೆ. ಇದರ ಬೆನ್ನಲ್ಲೇ, ಯುದ್ಧಾಪರಾಧದ ಹಿನ್ನೆಲೆಯಲ್ಲಿ ಇಸ್ರೇಲ್‌ ಪ್ರಧಾನಿ ಬೆಂಜಮಿನ್‌ ನೆತನ್ಯಾಹು (Benjamin Netanyahu) ಹಾಗೂ ಮೂವರು ಹಮಾಸ್‌ ಉಗ್ರರ ವಿರುದ್ಧ ಇಂಟರ್‌ನ್ಯಾಷನಲ್‌ ಕ್ರಿಮಿನಲ್‌ ಕೋರ್ಟ್‌ (International Criminal Court) ಅರೆಸ್ಟ್‌ ವಾರಂಟ್‌ ಹೊರಡಿಸಲು ಮುಂದಾಗಿದೆ. ಯುದ್ಧಾಪರಾಧದ ಹಿನ್ನೆಲೆಯಲ್ಲಿ ಅರೆಸ್ಟ್‌ ವಾರಂಟ್‌ ಹೊರಡಿಸಲಿದೆ ಎಂದು ಹೇಳಲಾಗುತ್ತಿದೆ.

ಬೆಂಜಮಿನ್‌ ನೆತನ್ಯಾಹು, ಇಸ್ರೇಲ್‌ ರಕ್ಷಣಾ ಸಚಿವ ಯೊಯಾವ್‌ ಗ್ಯಾಲಂಟ್‌, ಹಮಾಸ್‌ ಉಗ್ರ ಸಂಘಟನೆಯ ಯೆಹಿಯಾ ಸಿನ್ವರ್‌, ಮೊಹಮ್ಮದ್‌ ಡೈಫ್‌ ಹಾಗೂ ಇಸ್ಮಾಯಿಲ್‌ ಹನಿಯೇಹ್‌ ವಿರುದ್ಧ ಅರೆಸ್ಟ್‌ ವಾರಂಟ್‌ ಹೊರಡಿಸಬೇಕು ಎಂಬುದು ಜಾಗತಿಕ ಕೋರ್ಟ್‌ನ ಆದೇಶವಾಗಿದೆ. ಕಳೆದ ಏಳು ತಿಂಗಳಲ್ಲಿ ಇಸ್ರೇಲ್‌ ಹಾಗೂ ಪ್ಯಾಲೆಸ್ತೀನ್‌ನಲ್ಲಿ ನಡೆದ ಹಿಂಸಾಚಾರ, ಮಾನವ ಹಕ್ಕುಗಳ ದಮನ, ಪ್ರಾದೇಶಿಕ ಅಸ್ಥಿರತೆಗೆ ಧಕ್ಕೆ ತಂದ ಹಿನ್ನೆಲೆಯಲ್ಲಿ ಇವರ ವಿರುದ್ಧ ಅರೆಸ್ಟ್‌ ವಾರೆಟ್‌ ಹೊರಡಿಸಬೇಕು ಎಂಬುದಾಗಿ ಐಸಿಸಿ ಆದೇಶಿಸಿದೆ ಎಂದು ಕೋರ್ಟ್‌ನ ಮುಖ್ಯ ಪ್ರಾಸಿಕ್ಯೂಟರ್‌ ಆಗಿರುವ ಕರೀಮ್‌ ಖಾನ್‌ ಮಾಹಿತಿ ನೀಡಿದ್ದಾರೆ.

ಕರೀಮ್‌ ಖಾನ್‌ ಅವರು ಅರೆಸ್ಟ್‌ ವಾರಂಟ್‌ ಕುರಿತು ಸಲ್ಲಿಸುವ ದಾಖಲೆಗಳ ಆಧಾರದ ಮೇಲೆ ಅಂತಾರಾಷ್ಟ್ರೀಯ ಕ್ರಿಮಿನಲ್‌ ಕೋರ್ಟ್‌ ನ್ಯಾಯಮೂರ್ತಿಗಳು ಅಂತಿಮ ತೀರ್ಮಾನ ತೆಗೆದುಕೊಳ್ಳಲಿದ್ದಾರೆ ಎಂದು ಹೇಳಲಾಗುತ್ತಿದೆ. ಅರೆಸ್ಟ್‌ ವಾರಂಟ್‌ ಹೊರಡಿಸಿದರೂ ಬೆಂಜಮಿನ್‌ ನೆತನ್ಯಾಹು ಹಾಗೂ ಅವರ ರಕ್ಷಣಾ ಸಚಿವರ ಬಂಧನ ಆಗುವುದಿಲ್ಲ ಎಂದು ತಿಳಿದುಬಂದಿದೆ. ಇಂಟರ್‌ನ್ಯಾಷನಲ್‌ ಕ್ರಿಮಿನಲ್‌ ಕೋರ್ಟ್‌ನ ಸದಸ್ಯತ್ವವನ್ನು ಇಸ್ರೇಲ್‌ ಪಡೆದಿಲ್ಲ. ಹಾಗಾಗಿ, ಕೋರ್ಟ್‌ ಅರೆಸ್ಟ್‌ ವಾರಂಟ್‌ ಹೊರಡಿಸಿದರೂ ಬಂಧನ ಸಾಧ್ಯವಿಲ್ಲ ಎಂದೇ ವಿಶ್ಲೇಷಿಸಲಾಗುತ್ತಿದೆ.

ಅಕ್ಟೋಬರ್ 7ರಂದು ಹಮಾಸ್ ಇಸ್ರೇಲ್ ಮೇಲೆ ದಾಳಿ ನಡೆಸಿ 1,200 ನಾಗರಿಕರ ಸಾವಿಗೆ ಕಾರಣವಾಗಿತ್ತು. ಈ ಹಿನ್ನೆಲೆಯಲ್ಲಿ ಇಸ್ರೇಲ್, ಗಾಜಾಪಟ್ಟಿಯಲ್ಲಿನ ಹಮಾಸ್ ಉಗ್ರರನ್ನು ನಾಶ ಮಾಡುವ ಪಣತೊಟ್ಟು, ಸೇನಾ ಕಾರ್ಯಾಚರಣೆಯನ್ನು ಕೈಗೆತ್ತಿಕೊಂಡಿದೆ. ಗಾಜಾ ನಗರದ ಮೇಲೆ ಇಸ್ರೇಲ್‌ ನಡೆಸುತ್ತಿರುವ ನಿರಂತರ ದಾಳಿಗಳಿಂದಾಗಿ ಸಾವಿರಾರು ಜನ ಮೃತಪಟ್ಟಿದ್ದಾರೆ. ಲಕ್ಷಾಂತರ ಮಂದಿ ನಿರಾಶ್ರಿತರಾಗಿದ್ದಾರೆ. ಸಾವಿರಾರು ಕಟ್ಟಡಗಳು ಧರೆಗುರುಳಿವೆ. ಇಷ್ಟಾದರೂ ಇಸ್ರೇಲ್‌ ಪ್ರತಿದಾಳಿ ನಿಲ್ಲಿಸುತ್ತಿಲ್ಲ.

ಇದನ್ನೂ ಓದಿ: Al Jazeera: ಹಮಾಸ್‌ ಉಗ್ರರ ಪರ ನಿಲುವು; ಇಸ್ರೇಲ್‌ನಲ್ಲಿ ಅಲ್‌ಜಜೀರಾ ಚಾನೆಲ್‌ ಬಂದ್‌ ಮಾಡಿದ ನೆತನ್ಯಾಹು!

Continue Reading
Advertisement
Anti Terrorism Day
ದೇಶ8 mins ago

Anti Terrorism Day: ಇಂದು ಭಯೋತ್ಪಾದನಾ ವಿರೋಧಿ ದಿನ; ಏನು ಈ ದಿನದ ಹಿನ್ನೆಲೆ?

Dina Bhavishya
ಭವಿಷ್ಯ38 mins ago

Dina Bhavishya : ಹೂಡಿಕೆ ವ್ಯವಹಾರದಲ್ಲಿ ಹೆಚ್ಚು ಲಾಭ; ಈ ರಾಶಿಯವರಿಗೆ ಖುಲಾಯಿಸಲಿದೆ ಅದೃಷ್ಟ

Prajwal Revanna Case
ಕರ್ನಾಟಕ6 hours ago

Prajwal Revanna Case: ಪ್ರಜ್ವಲ್ ರೇವಣ್ಣ ಪಾಸ್‌ ಪೋರ್ಟ್ ರದ್ದು ಮಾಡಲು ವಿದೇಶಾಂಗ ಇಲಾಖೆಗೆ ಎಸ್‌ಐಟಿ ಪತ್ರ

Mobile
ದೇಶ6 hours ago

ಮೊಬೈಲ್‌ನಲ್ಲಿ ಅಶ್ಲೀಲ ವಿಡಿಯೊ ನೋಡಿ 15 ವರ್ಷದ ಅಕ್ಕನನ್ನೇ ಗರ್ಭಿಣಿ ಮಾಡಿದ 13 ವರ್ಷದ ಬಾಲಕ!

Army Officer
Lok Sabha Election 20246 hours ago

101ನೇ ವಯಸ್ಸಿನಲ್ಲೂ ‘ಕರ್ತವ್ಯ’ ಮರೆಯದೆ ವೋಟ್‌ ಮಾಡಿದ ನಿವೃತ್ತ ಯೋಧ; ಸೆಲ್ಯೂಟ್‌ ಎಂದರು ಜನ

Congress Guarantee
ಪ್ರಮುಖ ಸುದ್ದಿ6 hours ago

Congress Guarantee: ಗ್ಯಾರಂಟಿ ಯೋಜನೆಗಳಿಗೆ ಒಂದು ವರ್ಷಕ್ಕೆ ಸರ್ಕಾರ ಮಾಡಿದ ಖರ್ಚು ಎಷ್ಟು ಸಾವಿರ ಕೋಟಿ?

Malaysia Masters
ಕ್ರೀಡೆ7 hours ago

Malaysia Masters: ವಿಶ್ರಾಂತಿ ಬಳಿಕ ಮಲೇಷ್ಯಾ ಮಾಸ್ಟರ್ಸ್​ನಲ್ಲಿ ಕಣಕ್ಕಿಳಿಯಲು ಸಜ್ಜಾದ ಸಿಂಧು

Rahul Gandhi
ದೇಶ7 hours ago

Rahul Gandhi: ರಾಯ್‌ಬರೇಲಿಯಲ್ಲಿ ಜನ ಜೈ ಶ್ರೀರಾಮ್‌ ಎನ್ನುತ್ತಲೇ ಕಾಲ್ಕಿತ್ತ ರಾಹುಲ್‌ ಗಾಂಧಿ! Video ಇದೆ

MS Dhoni Bike Riding
ಕ್ರೀಡೆ7 hours ago

MS Dhoni Bike Riding: ಐಪಿಎಲ್​ ಮುಗಿಸಿ ತವರಿಗೆ ಮರಳಿದ್ದೇ ತಡ, ಬೈಕ್ ರೈಡಿಂಗ್​ ಮಾಡಿದ ಧೋನಿ​

Self Harming
ಕರ್ನಾಟಕ8 hours ago

Self Harming: ಟಿಸಿ ಕೊಟ್ಟಿಲ್ಲವೆಂದು ಬೇಸರಗೊಂಡು ವಿದ್ಯಾರ್ಥಿ ಆತ್ಮಹತ್ಯೆ

Sharmitha Gowda in bikini
ಕಿರುತೆರೆ8 months ago

Geetha Serial Kannada: ನಿದ್ದೆ ಕದ್ದ ಚೋರಿ! ನಟಿ `ಭಾನುಮತಿ’ ಹಾಟ್‌ ಪೋಟೊಗಳಿಗೆ ಫ್ಯಾನ್ಸ್ ಫುಲ್ ಫಿದಾ

Kannada Serials
ಕಿರುತೆರೆ7 months ago

Kannada Serials TRP: 2ನೇ ಸ್ಥಾನದಲ್ಲಿ 2 ಧಾರಾವಾಹಿಗಳು; ಟಿಆರ್‌ಪಿ ರೇಸ್‌ನಲ್ಲಿಲ್ಲ ಭಾಗ್ಯಲಕ್ಷ್ಮೀ!

Bigg Boss- Saregamapa 20 average TRP
ಕಿರುತೆರೆ7 months ago

Kannada Serials TRP: ಏಳನೇ ಸ್ಥಾನಕ್ಕೆ ʻಅಮೃತಧಾರೆʼ ಕುಸಿತ; ಬಿಗ್‌ ಬಾಸ್‌-ಸರಿಗಮಪ ಟಿಆರ್‌ಪಿ ಎಷ್ಟು?

galipata neetu
ಕಿರುತೆರೆ6 months ago

Kanyadana Serial: ಕಿರುತೆರೆಗೆ ಮತ್ತೆ ಎಂಟ್ರಿ ಕೊಟ್ಟ ʻಗಾಳಿಪಟʼ ಖ್ಯಾತಿಯ ʻನೀತುʼ!

Kannada Serials
ಕಿರುತೆರೆ8 months ago

Kannada Serials TRP: ನಾಲ್ಕನೇ ಸ್ಥಾನಕ್ಕೆ ಕುಸಿತ ಕಂಡ ʻಸೀತಾ ರಾಮʼ; ಟಿಆರ್‌ಪಿ ರೇಸ್‌ಗೆ ʻಭಾಗ್ಯಲಕ್ಷ್ಮಿʼ ಬ್ಯಾಕ್‌!

Kannada Serials
ಕಿರುತೆರೆ8 months ago

Kannada Serials TRP: ಟಿಆರ್‌ಪಿಯಲ್ಲಿ ʻಭಾಗ್ಯಲಕ್ಷ್ಮೀʼ ಹವಾ; ʻಪುಟ್ಟಕ್ಕನ ಮಕ್ಕಳುʼ ಧಾರಾವಾಹಿಗೆ ಸಂಕಷ್ಟ!

Bigg Boss' dominates TRP; Sita Rama fell to the sixth position
ಕಿರುತೆರೆ7 months ago

Kannada Serials TRP: ಟಿಆರ್‌ಪಿಯಲ್ಲಿ ʻಬಿಗ್ ಬಾಸ್ʼದೇ ಮೇಲುಗೈ; 6ನೇ ಸ್ಥಾನಕ್ಕೆ ಕುಸಿದ ʻಸೀತಾ ರಾಮʼ

geetha serial Dhanush gowda engagement
ಕಿರುತೆರೆ5 months ago

Dhanush Gowda: ಗೀತಾ ಧಾರಾವಾಹಿ ನಟನ ನಿಶ್ಚಿತಾರ್ಥ; ಭವ್ಯಾಳ ಕಮೆಂಟ್‌ ಬಾಕ್ಸ್‌ ಆಫ್‌!

varun
ಕಿರುತೆರೆ6 months ago

Brindavana Serial: ʼಬೃಂದಾವನʼ ಧಾರಾವಾಹಿಯಲ್ಲಿ ದೊಡ್ಡ ಟ್ವಿಸ್ಟ್‌; ಪ್ರಮುಖ ಪಾತ್ರಧಾರಿಯೇ ಬದಲು

Kannada Serials
ಕಿರುತೆರೆ8 months ago

Kannada Serials TRP: ಟಿಆರ್‌ಪಿಯಲ್ಲಿ ಏರಿಕೆ ಕಂಡ ʻಅಮೃತಧಾರೆʼ; ʻಗಟ್ಟಿಮೇಳʼಕ್ಕೆ ನಾಲ್ಕನೇ ಸ್ಥಾನ!

Karnataka Rain
ಮಳೆ16 hours ago

Karnataka Rain : ಬಂಗಾಳ ಕೊಲ್ಲಿಯಲ್ಲಿ ವಾಯುಭಾರ ಕುಸಿತ; ಸಮುದ್ರಕ್ಕಿಳಿಯದಂತೆ ಮೀನುಗಾರರಿಗೆ ಎಚ್ಚರಿಕೆ

Karnataka Rain
ಮಳೆ2 days ago

Karnataka Rain : ಒಂದೇ ಮಳೆಗೆ ಹೊಳೆಯಂತಾದ ಬೆಂಗಳೂರು ರಸ್ತೆಗಳು! ಕಳಸದಲ್ಲೂ ಮುಂದುವರಿದ ಅಬ್ಬರ

Karnataka rain
ಮಳೆ2 days ago

Karnataka Rain : ವಿಜಯನಗರದಲ್ಲಿ ಸಿಡಿಲಿಗೆ ಜಾನುವಾರು ಬಲಿ; ಬೆಂಗಳೂರು ಸೇರಿ ಹಲವೆಡೆ ಭಾರಿ ಮಳೆ

Karnataka Rain
ಮಳೆ2 days ago

Karnataka Rain: ಧಾರಾಕಾರ ಮಳೆಗೆ ಕಾಂಪೌಂಡ್ ಕುಸಿದು 4 ಬೈಕ್‌ಗಳು ಜಖಂ; ಮದುವೆ ಮಂಟಪಕ್ಕೆ ನುಗ್ಗಿದ ನೀರು‌

Prajwal Revanna Case JDS calls CD Shivakumar pen drive gang
ರಾಜಕೀಯ3 days ago

Prajwal Revanna Case: CD ಶಿವಕುಮಾರ್ ಪೆನ್ ಡ್ರೈವ್ ಗ್ಯಾಂಗ್ ಎಂದ ಕುಟುಕಿದ ಜೆಡಿಎಸ್‌!

Karnataka weather Forecast
ಮಳೆ4 days ago

Karnataka Weather : ಮೈಸೂರು, ಮಂಡ್ಯ ಸೇರಿ ಈ 7 ಜಿಲ್ಲೆಗಳಲ್ಲಿ ವ್ಯಾಪಕ ಮಳೆ ಸಂಭವ

Dina Bhavishya
ಭವಿಷ್ಯ4 days ago

Dina Bhavishya : ಈ ರಾಶಿಯ ಪ್ರೇಮಿಗಳಿಗೆ ಮನೆಯಿಂದ ಸಿಗುತ್ತೆ ಗ್ರೀನ್‌ ಸಿಗ್ನಲ್‌

Karnataka Weather Forecast
ಮಳೆ5 days ago

Karnataka Weather : ಭಾರಿ ಮಳೆಗೆ ಕೊಟ್ಟೂರು ಬಸ್ ಸ್ಟ್ಯಾಂಡ್‌ ಜಲಾವೃತ; ‌ ತಾಯಿ-ಮಗ ಗ್ರೇಟ್‌ ಎಸ್ಕೇಪ್‌

Drowned in water
ಹಾಸನ5 days ago

Drowned in water : ಕೆರೆಯಲ್ಲಿ ಈಜಲು ಹೋದ ನಾಲ್ವರು ನೀರುಪಾಲು; ಓರ್ವ ಬಾಲಕ ಪಾರು

Suspicious Case
ಬೆಂಗಳೂರು5 days ago

Suspicious Case : ಬಾತ್‌ ರೂಂನಲ್ಲಿತ್ತು ಕಾಲೇಜು ಹುಡುಗಿ ಡೆಡ್‌ ಬಾಡಿ; ಕುತ್ತಿಗೆ ಕೊಯ್ದು ಸಾಯಿಸಿದವರು ಯಾರು?

ಟ್ರೆಂಡಿಂಗ್‌