KRG Studios: ತಮಿಳು, ಮಲಯಾಳಂ ಚಿತ್ರರಂಗಗಳಿಗೆ ಕೆಆರ್​ಜಿ ಸ್ಟುಡಿಯೋಸ್ ಪದಾರ್ಪಣೆ - Vistara News

ಸ್ಯಾಂಡಲ್ ವುಡ್

KRG Studios: ತಮಿಳು, ಮಲಯಾಳಂ ಚಿತ್ರರಂಗಗಳಿಗೆ ಕೆಆರ್​ಜಿ ಸ್ಟುಡಿಯೋಸ್ ಪದಾರ್ಪಣೆ

KRG Studios ಇನ್ನು ಹೆಸರಾಂತ ಹಿಂದಿ ಚಿತ್ರ ನಿರ್ಮಾಣ ಸಂಸ್ಥೆಯಾದ ಟಿ.ವಿ.ಎಫ್ ನೊಂದಿಗೆ “ಪೌಡರ್” ಎಂಬ ಕನ್ನಡ ಚಿತ್ರವನ್ನು ಎದುರು ನೋಡುತ್ತಿದೆ. ಅಷ್ಟೇ ಅಲ್ಲದೆ, ʻಬೆಂಗಳೂರು ಡೇಸ್‌ʼ, ʻಉಸ್ತಾದ್ ಹೊಟೇಲ್ʼ ಖ್ಯಾತಿಯ ಅಂಜಲಿ ಮೆನನ್ ನಿರ್ದೇಶನದಲ್ಲಿ ತಮಿಳು ಚಿತ್ರವೊಂದನ್ನು ನಿರ್ಮಿಸುವ ಮೂಲಕ ತಮಿಳು ಚಿತ್ರರಂಗಕ್ಕೂ ಕಾಲಿಡಲಿದೆ.

VISTARANEWS.COM


on

KRG Studios Making Movie In Other Languages
ಮಹತ್ವದ, ಕುತೂಹಲಕರ ಸುದ್ದಿಗಾಗಿ ಫಾಲೊ ಮಾಡಿ
Koo

ಬೆಂಗಳೂರು: ಕೆಆರ್ ಜಿ ಸ್ಟುಡಿಯೋಸ್ (KRG Studios) ಒಂದು ಹೆಸರಾಂತ ಚಿತ್ರ ನಿರ್ಮಾಣ, ವ್ಯಾಪಾರ ಹಾಗೂ ವಿತರಣಾ ಸಂಸ್ಥೆಯಾಗಿದ್ದು, ಹಲವಾರು ಯಶಸ್ವಿ ಚಿತ್ರಗಳನ್ನು ಕೊಡುಗೆಯಾಗಿ ನೀಡಿದೆ‌. ಇದೀಗ ಈ ಸಂಸ್ಥೆ ಬೇರೆ ಭಾಷೆಯ ಚಿತ್ರರಂಗಕ್ಕೂ ಕಾಲಿಡುತ್ತಿದೆ.

ʻಸೂಫಿಯುಂ ಸುಜಾತಯುಂʼ,‌ ʻಹೋಮ್ʼ, ʻಅಂಗಮಲೇ ಬಾಯ್ಸ್ʼ ನಂತಹ ಯಶಸ್ವಿ ಮಲಯಾಳಂ ಚಿತ್ರಗಳನ್ನು ನೀಡಿರುವ Friday Film Houseನೊಂದಿಗೆ “ಪಡಕ್ಕಲಂ” ಎಂಬ ಮಲಯಾಳಂ ಚಿತ್ರಕ್ಕಾಗಿ ಕೆಆರ್ ಜಿ ಕೈ ಜೋಡಿಸಿದೆ. ಈ‌ ಚಿತ್ರಕಥೆಯನ್ನು ಮನು ಸ್ವರಾಜ್ ಬರೆದು ನಿರ್ದೇಶಿಸಲಿದ್ದಾರೆ. ಬೇಸಿಲ್ ಜೋಸೆಫ್ ನಂತಹ ಖ್ಯಾತ ನಿರ್ದೇಶಕರೊಂದಿಗೆ ಸಹಾಯಕ ನಿರ್ದೇಶಕನಾಗಿ ಕಾರ್ಯ ನಿರ್ವಹಿಸಿರುವ ಖ್ಯಾತಿ ಇವರದ್ದು.
ಕೆ ಆರ್ ಜಿ ಸ್ಟುಡಿಯೋಸ್ ಮತ್ತು Friday Film House ಸಹಯೋಗದಲ್ಲಿ ಈಗಾಗಲೇ ಮೂಡಿ ಬಂದಿರುವ “ಅಬ್ಬಬ್ಬ” ಎಂಬ ಹಾಸ್ಯಭರಿತ ಕನ್ನಡ ಚಿತ್ರ, “ವಾಲಟಿ” ಎಂಬ ಮಲಯಾಳಂ ಚಿತ್ರದ ಕನ್ನಡ ಡಬ್ಬಿಂಗ್ ಹಾಗೂ ಬಿಡುಗಡೆ ಎಲ್ಲೆಡೆ ಸದ್ದು ಮಾಡಿತ್ತು.

ಇನ್ನು ಹೆಸರಾಂತ ಹಿಂದಿ ಚಿತ್ರ ನಿರ್ಮಾಣ ಸಂಸ್ಥೆಯಾದ ಟಿ.ವಿ.ಎಫ್ ನೊಂದಿಗೆ “ಪೌಡರ್” ಎಂಬ ಕನ್ನಡ ಚಿತ್ರವನ್ನು ಎದುರು ನೋಡುತ್ತಿದೆ. ಅಷ್ಟೇ ಅಲ್ಲದೆ, ʻಬೆಂಗಳೂರು ಡೇಸ್‌ʼ, ʻಉಸ್ತಾದ್ ಹೊಟೇಲ್ʼ ಖ್ಯಾತಿಯ ಅಂಜಲಿ ಮೆನನ್ ನಿರ್ದೇಶನದಲ್ಲಿ ತಮಿಳು ಚಿತ್ರವೊಂದನ್ನು ನಿರ್ಮಿಸುವ ಮೂಲಕ ತಮಿಳು ಚಿತ್ರರಂಗಕ್ಕೂ ಕಾಲಿಡಲಿದೆ.

ಇದನ್ನೂ ಓದಿ: Anjali Menon: ʻಬೆಂಗಳೂರು ಡೇಸ್’ ಖ್ಯಾತಿಯ ನಿರ್ದೇಶಕಿ ಅಂಜಲಿ ಮೆನನ್ ತಮಿಳು ಸಿನಿಮಾಗೆ ಕೆಆರ್‌ಜಿ ಸ್ಟುಡಿಯೋಸ್‌ ಸಾಥ್‌!

ಇನ್ನು ಇಂತಹ ಅನೇಕ ನವೀನ ಕಥಾ ವಸ್ತುವನ್ನು ಚಿತ್ರರಂಗಕ್ಕೆ ಪರಿಚಯಿಸುವ ಮಹೋದ್ದೇಶವನ್ನು ಕೆಆರ್ ಜಿ ಸ್ಟುಡಿಯೋಸ್ ಹೊಂದಿದೆ. ಈ ಮೂಲಕ ಕನ್ನಡ ಚಿತ್ರಗಳ ಮಾರ್ಕೆಟಿಂಗ್ ವ್ಯಾಪ್ತಿಯನ್ನು ಹೊರ ರಾಜ್ಯಗಳಲ್ಲಿ ವಿಸ್ತರಿಸಲು ಹೊರಟಿದೆ. ಸದ್ಯಕ್ಕೆ ಕೆಆರ್ ಜಿ ಬ್ಯಾನರ್‌ನಲ್ಲಿ ʻಪೌಡರ್ʼ, ʻಉತ್ತರಕಾಂಡʼ, ʻಕಿರಿಕೆಟ್ 11ʼ, ʻಕೆ.ಕೆʼ ಮುಂತಾದ ಚಿತ್ರಗಳು ತಯಾರಾಗುತ್ತಿವೆ.

ಕ್ಷಣ ಕ್ಷಣದ ಮಾಹಿತಿಗಾಗಿ Vistara News FaceBook ಪೇಜ್ ಫಾಲೋ ಮಾಡಿ
ಮಹತ್ವದ ಮಾಹಿತಿಗಾಗಿ ವಿಸ್ತಾರ ನ್ಯೂಸ್ ಆ್ಯಪ್ ಉಚಿತವಾಗಿ ಡೌನ್ ಲೋಡ್ ಮಾಡಿಕೊಳ್ಳಿ: Andriod App | IOS App
Continue Reading
Click to comment

Leave a Reply

Your email address will not be published. Required fields are marked *

ಸ್ಯಾಂಡಲ್ ವುಡ್

Chandan Shetty: 3ನೇ ವ್ಯಕ್ತಿ ಜತೆ ನಿವೇದಿತಾ ಸಂಬಂಧದ ಕುರಿತು ಚಂದನ್‌ ಹೇಳಿದ್ದೇನು?

Chandan Shetty: ನಿವೇದಿತಾ ಹುಟ್ಟುಹಬ್ಬದ ದಿನ ಸೃಜನ್ ಲೋಕೇಶ್ ಒಂದು ವಿಡಿಯೊ ಶೇರ್ ಮಾಡಿ ಶುಭ ಕೋರಿದ್ದರು. ಅದರಲ್ಲಿ ನಿವೇದಿತಾ ಜತೆಗಿನ ಒಂದಷ್ಟು ಫೋಟೊಗಳನ್ನು ಹಾಕಿದ್ದರು. ಇದಕ್ಕೆ ಮನಬಂದಂತೆ ಕಮೆಂಟ್‌ ಮಾಡಿದ್ದಾರೆ ನೆಟ್ಟಿಗರು. ಆ ಬಗ್ಗೆ ಮಾಜಿ ದಂಪತಿ ಸ್ಪಷ್ಟನೆ ನೀಡಿದ್ದಾರೆ.ಒಬ್ಬ ಮೂರನೇ ವ್ಯಕ್ತಿಯನ್ನು ನಿವೇದಿತಾ ಹೆಸರಿಗೆ ಸೇರಿಸಿ ಸಂಬಂಧ ಕಲ್ಪಿಸಿದ್ದು ನನ್ನ ಮನಸ್ಸಿಗೆ ತುಂಬ ಬೇಸರ ಆಗಿದೆ ಎಂದಿದ್ದಾರೆ ಚಂದನ್‌.

VISTARANEWS.COM


on

Chandan Shetty Niveditha gowda roumers on srujan lokesh
Koo

ಬೆಂಗಳೂರು: ಕನ್ನಡದ ರ್‍ಯಾಪರ್‌ ಚಂದನ್ ಶೆಟ್ಟಿ (Chandan Shetty) ಮತ್ತು ನಿವೇದಿತಾ ಗೌಡ ವಿಚ್ಛೇದನ ಪಡೆದ ಬೆನ್ನಲ್ಲೇ ಕೆಲವರು ನಟ ಸೃಜನ್ ಲೋಕೇಶ್ ಹೆಸರು ಎಳೆದುತಂದು ಟ್ರೋಲ್ ಮಾಡಿದ್ದರು. ನಿವೇದಿತಾ ಹುಟ್ಟುಹಬ್ಬದ ದಿನ ಸೃಜನ್ ಲೋಕೇಶ್ ಒಂದು ವಿಡಿಯೊ ಶೇರ್ ಮಾಡಿ ಶುಭ ಕೋರಿದ್ದರು. ಅದರಲ್ಲಿ ನಿವೇದಿತಾ ಜತೆಗಿನ ಒಂದಷ್ಟು ಫೋಟೊಗಳನ್ನು ಹಾಕಿದ್ದರು. ಇದಕ್ಕೆ ಮನಬಂದಂತೆ ಕಮೆಂಟ್‌ ಮಾಡಿದ್ದಾರೆ ನೆಟ್ಟಿಗರು. ಆ ಬಗ್ಗೆ ಮಾಜಿ ದಂಪತಿ ಸ್ಪಷ್ಟನೆ ನೀಡಿದ್ದಾರೆ.ಒಬ್ಬ ಮೂರನೇ ವ್ಯಕ್ತಿಯನ್ನು ನಿವೇದಿತಾ ಹೆಸರಿಗೆ ಸೇರಿಸಿ ಸಂಬಂಧ ಕಲ್ಪಿಸಿದ್ದು ನನ್ನ ಮನಸ್ಸಿಗೆ ತುಂಬ ಬೇಸರ ಆಗಿದೆ ಎಂದಿದ್ದಾರೆ ಚಂದನ್‌.

ಮೂರನೇ ವ್ಯಕ್ತಿಯನ್ನು ಸಂಬಂಧಿಸಿ ಸಂಬಂಧ ಕೂಡ ಕಲ್ಪಿಸುತ್ತಿದ್ದಾರೆ. ಆದರೆ ಅವರು ನಮಗೆ ಫ್ಯಾಮಿಲಿ ತರ. ಆ ವ್ಯಕ್ತಿ ಜತೆ ಹೆಸರು ಸೇರಿಸಿದ್ದು ಸರಿಯಲ್ಲ. ಇದು ಕನ್ನಡಿಗರಾಗಿ ನಮಗೆ ಶೋಭೆ ಅಲ್ಲ. ಯಾಕೆಂದರೆ ಆ ವ್ಯಕ್ತಿಯ ಮನೆಗೆ ನಾನು ಕೂಡ ಅನೇಕ ಬಾರಿ ಹೋಗಿದ್ದೇನೆ. ತುಂಬ ಒಳ್ಳೆಯ ಕುಟುಂಬ ಅವರದ್ದುʼʼಎಂದರು ಚಂದನ್‌.

ಇನ್ನು ನಿವೇದಿತಾ ಕೂಡ ʻʻಆ ರೀತಿಯ ಪೋಸ್ಟ್​ಗಳನ್ನು ನೋಡಿದಾಗ ನನಗೆ ನೋವಾಯಿತು. ನಾವೆಲ್ಲ ಫ್ಯಾಮಿಲಿ ಫ್ರೆಂಡ್ಸ್​. ಪ್ರತಿ ವರ್ಷ ಅವರು ನನ್ನ ಜನ್ಮದಿನಕ್ಕೆ ವಿಶ್​ ಮಾಡುತ್ತಾರೆ. ನಾನು ಕೂಡ ಅವರಿಗೆ ವಿಶ್​ ಮಾಡುತ್ತೇನೆ. ಈ ವರ್ಷವೇ ಈ ರೀತಿ ವದಂತಿ ಹಬ್ಬಿದ್ದು ಯಾಕೆ ಅಂತ ಗೊತ್ತಿಲ್ಲ. ಇದರಿಂದ ಅವರ ಫ್ಯಾಮಿಲಿಯವರಿಗೆ ತುಂಬ ನೋವಾಗುತ್ತದೆ. ಫ್ಯಾಮಿಲಿ ಎಲ್ಲರಿಗೂ ಇರತ್ತೆ, ಬೇರೆಯವರ ಇಮೋಷನ್‌ ಹರ್ಟ್‌ ಮಾಡಬೇಡಿ. ಬೇಸ್‌ಲೆಸ್‌ ಆಗಿ ಏನೇನೊ ಹೇಳಬಾರದು. ನಾವಿಬ್ಬರೂ ಒಮ್ಮತದಿಂದ ನಿರ್ಧಾರ ಮಾಡಿಯೇ ಡಿವೋರ್ಸ್‌ ಪಡೆದುಕೊಂಡಿದ್ದೇವೆ. ನಾವು ಸೆಲೆಬ್ರಿಟಿಯಾಗಿ ನಮ್ಮ ಫಾಲ್ಲೋವರ್ಸ್ ಯಾರಿಗೂ ಡಿವೋರ್ಸ್ ಕೊಡಿ ಎಂದು ಪ್ರಚೋದನೆ ಕೊಡುತ್ತಿಲ್ಲ ʼʼಎಂದರು.

ಇದನ್ನೂ ಓದಿ: Richa Chadha: ಖ್ಯಾತ ನಿರ್ದೇಶಕ ಸೆಟ್‌ನಲ್ಲಿ ಮದ್ಯ ಸೇವಿಸಿ ಫಜೀತಿಗೆ ಒಳಗಾದ ರಿಚಾ ಚಡ್ಡಾ!

ಕೊನೆಯದಾಗಿ ಚಂದನ್‌ ಮಾತನಾಡಿ ʻʻನಾನು ಮಾರ್ನಿಂಗ್ ಪರ್ಸನ್, ನಿವೇದಿತಾ ನೈಟ್ ಪರ್ಸನ್ ಇಲ್ಲಿಂದಲೇ ಸಮಸ್ಯೆ ಶುರುವಾಗಿತ್ತು. ನಾನು ಬೆಳಗ್ಗೆ ಬೇಗ ಎದ್ದೇಳ್ತಿನಿ, ನಿವೇದಿತಾ ಲೇಟ್ ಆಗಿ ಎದೆಳ್ತಾಳೆ. ಇಬ್ರಿಗೂ ಟೈಮ್ ಕೊಡೋಕೆ ಆಗುತ್ತಿರಲಿಲ್ಲ. 1 ವರ್ಷದಿಂದ ದೂರ ಆಗುವ ಬಗ್ಗೆ ಮಾತುಕಥೆ ಇತ್ತು. ಕ್ಯಾಂಡಿ ಕ್ರಶ್ ಸಿನಿಮಾದಲ್ಲಿ ಒಟ್ಟಿಗೆ ನಟಿಸಿದ್ದೇವೆ. ಒಂದು ದಿನದ ಶೂಟಿಂಗ್‌ ಬಾಕಿ ಇದೆ. ಇಬ್ಬರೂ ಭಾಗಿ ಆಗ್ತೇವೆ. ವೈಯಕ್ತಿಯ ಸಮಸ್ಯೆಯನ್ನು ಪ್ರೊಫೆಷನಲ್‌ಗೆ ತರೋದಿಲ್ಲʼʼಎಂದರು ಚಂದನ್‌.

Continue Reading

ಸಿನಿಮಾ

Chandan Shetty: ನಮ್ಮ ಖುಷಿ ಮೇಲೆ ಪ್ರಶಾಂತ್‌ ಸಂಬರಗಿ ಕಣ್ಣು; ಟಾಂಗ್‌ ಕೊಟ್ಟ ಚಂದನ್‌ ಶೆಟ್ಟಿ

Chandan Shetty: ಪ್ರಶಾಂತ್‌ ಸಂಬರಗಿ ʻದುಡ್ಡಿನ ಹಿಂದೆ ಹೋಗಿರುವಂತಹವರು ಅಥವಾ ಅವಕಾಶಗಳ ಹಿಂದೆ ಹೋಗಿರುವಂತಹವರು ಯಾರು ಎಂದು ಕರ್ನಾಟಕದ ಜನತೆಗೆ ಮುಂದೆ ಗೊತ್ತಾಗುತ್ತೆʼʼ ಎಂದಿದ್ದರು. ಇದೀಗ ಚಂದನ್‌ ಈ ವಿಚಾರವಾಗಿ ಸುದ್ದಿಗೋಷ್ಠಿಯಲ್ಲಿ ಹೆಸರನ್ನು ಪ್ರಸ್ತಾಪ ಮಾಡದೇ ಈ ಬಗ್ಗೆ ಸ್ಪಷ್ಟತೆ ಕೊಟ್ಟಿದ್ದಾರೆ.

VISTARANEWS.COM


on

Chandan Shetty reaction about prashant sambaragi statement on divorce
Koo

ಬೆಂಗಳೂರು: ಚಂದನ್‌ ಶೆಟ್ಟಿ (Niveditha Gowda) ಹಾಗೂ ನಿವೇದಿತಾ ಗೌಡ ಅವರು ಪರಸ್ಪರ ಒಪ್ಪಿಗೆ ಮೇರೆಗೆ ವಿಚ್ಛೇದನ ಪಡೆದುಕೊಂಡಿದ್ದಾರೆ. ಬಿಗ್‌ಬಾಸ್ ಸ್ಪರ್ಧಿ ಪ್ರಶಾಂತ್ ಸಂಬರಗಿ ತನ್ನ ಸೋಶಿಯಲ್ ಮೀಡಿಯಾ ಖಾತೆಯಲ್ಲಿ “ಜೊತೆಯಾಗಿರಲು ಗಟ್ಟಿಯಾದ ಭರವಸೆ ಬೇಕು, ದೂರಾಗಲು ಚಿಕ್ಕದಾದ ಸಂಶಯ ಸಾಕು’ಎಂದು ಚಂದನ್‌ ಕುರಿತಾಗಿ ಬರೆದುಕೊಂಡಿದ್ದರು. ಇದಾದ ಬಳಿಕ ಪ್ರಶಾಂತ್‌ ಸಂಬರಗಿ ʻದುಡ್ಡಿನ ಹಿಂದೆ ಹೋಗಿರುವಂತಹವರು ಅಥವಾ ಅವಕಾಶಗಳ ಹಿಂದೆ ಹೋಗಿರುವಂತಹವರು ಯಾರು ಎಂದು ಕರ್ನಾಟಕದ ಜನತೆಗೆ ಮುಂದೆ ಗೊತ್ತಾಗುತ್ತೆʼʼ ಎಂದಿದ್ದರು. ಇದೀಗ ಚಂದನ್‌ ಈ ವಿಚಾರವಾಗಿ ಸುದ್ದಿಗೋಷ್ಠಿಯಲ್ಲಿ ಹೆಸರನ್ನು ಪ್ರಸ್ತಾಪ ಮಾಡದೇ ಈ ಬಗ್ಗೆ ಸ್ಪಷ್ಟತೆ ಕೊಟ್ಟಿದ್ದಾರೆ.

“ಮಾಧ್ಯಮಗಳಲ್ಲಿ ಮೂರನೇ ವ್ಯಕ್ತಿ ನಮ್ಮ ಸಂಬಂಧದ ಬಗ್ಗೆ ಕೊಟ್ಟಿರುವ ಹೇಳಿಕೆ ನಿಜವಲ್ಲ. ಇದು ನಮ್ಮ ವೈಯಕ್ತಿಕ ಜೀವನ. ನಾವಿಬ್ರು ಖುಷಿಯಾಗಿರಬೇಕು ಎಂದೇ ದೂರ ಆಗಿರುವುದು. ಆದರೆ ಆ ವ್ಯಕ್ತಿ ನಮ್ಮ ಖುಷಿ ನೋಡುವುದಕ್ಕೆ ಆಗ್ತಿಲ್ಲ ಅನ್ನಿಸುತ್ತದೆ. ನಮ್ಮ ಜೋಡಿ ನೋಡಿ ಎಲ್ಲರೂ ಖುಷಿ ಪಡ್ತಾ ಇದ್ದರು. ಬೇರೆ ಕಡೆ ನಾನು ಸಂದರ್ಶನ ಒಬ್ಬರು ಕೊಟ್ಟಿರುವುದು ನೋಡಿದೆ. ನಾನು ಯಾರಿಗೂ ಫ್ರೆಂಡ್‌ ಅಂದಿಲ್ಲ, ಆ ವ್ಯಕ್ತಿ ಜತೆ ನಾನು ಏನೂ ಆ ತರ ಮಾತನಾಡಿಲ್ಲ. ಈ ರೀತಿ ಅವರು ಮಾತನಾಡಿದ್ದು ಸುಳ್ಳು. ಸುಳ್ಳು ಹೇಳಿಕೆ ಕೊಟ್ಟಿದ್ದಾರೆ. ಬೇರೆ ಅವರ ವೈಯಕ್ತಿಕ ಜೀವನ ಬಗ್ಗೆ ಯಾಕೆ ಹೀಗೆ ಮಾತನಾಡುತ್ತಿದ್ದೀರಾ ಗೊತ್ತಿಲ್ಲ. ನಾವು ಪೋಷಕರು ಜತೆ ಮಾತನಾಡಿ ಈ ನಿರ್ಧಾರವನ್ನು ತೆಗೆದುಕೊಂಡಿದ್ದೇವೆ. ನಮ್ಮಿಬ್ಬರ ಮಧ್ಯೆ ಇಲ್ಲದೇ ಇರುವ ಉಹಾ ಪೋಹಾ ಬೀಜ ಬಿತ್ತಬೇಡಿ. ಇಲ್ಲಿಗೆ ಈ ವಿಚಾರ ನಿಲ್ಲಿಸಿ. ವದಂತಿಗಳಿಗೆ ಕಿವಿ ಕೊಡಬೇಡಿ. ಆದರೆ ನಾವು ಬ್ಯಾಲೆನ್ಸ್‌ ಮಾಡೋಕೆ ನೋಡಿದ್ವಿ ಆದರೆ ಆಗಿಲ್ಲʼʼಅಷ್ಟೇ ಅಂದರು.

ಇದನ್ನೂ ಓದಿ: Chandan Shetty: ಚಂದನ್-ನಿವೇದಿತಾ ಸಂಬಂಧ ಸರಿ ಮಾಡ್ತಾರಾ ಧ್ರುವ ಸರ್ಜಾ? ಪ್ರಥಮ್ ಕೊಟ್ಟಿದ್ದಾರೆ ಕ್ಲೂ!

ಪ್ರಶಾಂತ್‌ ಸಂಬರಗಿ ಹೇಳಿದ್ದೇನು?

ಪ್ರಶಾಂತ್‌ ಸಂಬರಗಿ ಮಾತನಾಡಿ ʻʻನನಗೆ ಚಂದನ್‌ ಆತ್ಮೀಯ ಗೆಳೆಯ. ಚಂದನ್‌ ಶೆಟ್ಟಿ ಪ್ರಮುಖ ಪಾತ್ರದಲ್ಲಿ ನಟಿಸಿರುವ ‘ವಿದ್ಯಾರ್ಥಿ ವಿದ್ಯಾರ್ಥಿನಿಯರೇ’  ಸಿನಿಮಾದಲ್ಲಿ ಚಂದನ್‌ ನಾಯಕ. ನಾನು ಅದರಲ್ಲಿ ಪೊಲೀಸ್‌ ಪಾತ್ರ ಮಾಡಿದ್ದೇನೆ. 15 ದಿನಗಳ ಕಾಲ ಒಟ್ಟಿಗೆ ಶೂಟಿಂಗ್‌ ಮಾಡಿದ್ದೇವೆ. ಖುಷಿ ಪಟ್ಟಿದ್ದೇವೆ, ಹೊಡೆದಾಡಿಕೊಂಡಿದ್ದೇವೆ,, ಮಜಾ ಮಾಡಿದ್ದೇವೆ. ಚಂದನ್‌ ಹಾಗೂ ನಿವೇದಿತಾ ಸ್ಯಾಂಡಲ್‌ವುಡ್‌ ಪವರ್‌ ಕಪಲ್‌. ಆದರೆ ಏಕಾಏಕಿ ಅವರು ದೂರ ಆದರು. ಎಲ್ಲರೂ ಈ ವಿಷಯ ಕೇಳಿ ಶಾಕ್‌ ಆದರು. ಆದರೆ ನನಗೆ ಈ ವಿಚಾರ ಹೊಸದಲ್ಲ. ಒಂದು ವರ್ಷದ ಹಿಂದೆಯೇ ಗೊತ್ತಿತ್ತುʼʼ ಎಂದಿದ್ದರು.

ʻʻಚಂದನ್‌ ದಸರಾದಲ್ಲಿ ಪ್ರಪೋಸ್‌ ಮಾಡಿರುವ ಬಗ್ಗೆ ನನ್ನ ಧಿಕ್ಕಾರ ಕೂಡ ಇತ್ತು. ಆದರೂ ಕೊನೆಗೆ ಅವೆಲ್ಲ ಕ್ಷಮಿಸಿ ಮುಂದೆ ಒಳ್ಳೆಯದಾಗಲಿ ಎಂದು ಹಾರೈಸಿದೆ. ಈ ತಿಂಗಳಲ್ಲಿ ವಿದ್ಯಾರ್ಥಿ ವಿದ್ಯಾರ್ಥಿನಿಯರೇ ಸಿನಿಮಾ ಪ್ರಮೋಷನ್‌ಗೆ ಚಂದನ್‌ ಬರಲಿಲ್ಲ. ಹಲವು ಪ್ರಮೋಷನ್‌ಗೆ ಬರಲಿಲ್ಲ. 6 ತಿಂಗಳ ಹಿಂದೆಯೇ ಚಂದನ್‌ ಬಗ್ಗೆ ಹಿಂಟ್‌ ಸಿಕ್ಕಿತ್ತು. ಚಂದನ್‌ ಮನಸ್ಥಿತಿ ಸರಿಯಿಲ್ಲ ಎಂದು. ಒಂದು ಪ್ರಪೋಷನ್‌ ಲಾಂಚ್‌ಗೆ ಮನೆಯಲ್ಲಿ ಹಾಕಿರುವ ಡ್ರೆಸ್‌ ಹಾಕಿಕೊಂಡೇ ಚಂದನ್‌ ಬಂದಿದ್ದರು. ಇದಕ್ಕೆ ನಮ್ಮ ಭಿನ್ನಾಭಿಪ್ರಾಯ ಕೂಡ ಇತ್ತು. ನೀವು ಹೀರೊ ಆಗಿ ಹೀರೊ ತರಹ ಪ್ರೆಸೆಂಟ್‌ ಆಗಬೇಕು. ಈ ತರಹ ಅವತಾರದಲ್ಲಿ ಬರೋದು ಸರಿಯಲ್ಲ ಎಂದು ನಿರ್ದೇಶಕರು ಕೇಳಿದಾಗ, ಈ ವಿಚಾರ ಬಹಿರಂಗಪಡಿಸಿದ್ದರು. ನಂದು ಮತ್ತೆ ನಿವೇದಿತಾ ವಿಷನ್‌ ಮ್ಯಾಚ್‌ ಆಗ್ತಿಲ್ಲ. ಒಟ್ಟಿಗೆ ಬದುಕಲು ಆಗ್ತಿಲ್ಲ. ತುಂಬ ಸಮಸ್ಯೆಯಲ್ಲಿದ್ದೇನೆ. ಮುಂದೆ ಗೊತ್ತಾಗತ್ತೆ ಎಂದು ಚಂದನ್‌ ನಿರ್ದೇಶಕರ ಹತ್ತಿರ ಹೇಳಿಕೊಂಡಿದ್ದರು ʼ ಎಂದಿದ್ದರು.

ʻʻಚಂದನ್ ಅಮೆರಿಕಾಗೆ ಮ್ಯೂಸಿಕ್ ಕಾರ್ಯಕ್ರಮಕ್ಕೆ ಹೋಗಿದ್ದ. ಆಗ ನಿವೇದಿತಾ ಹೋಗಲಿಲ್ಲ. ನನ್ನ ಮೊದಲನೇ ಪ್ರಶ್ನೆ ಇದ್ದಿದ್ದು ಯಾಕೆ ಅವಳನ್ನು ಕರೆದುಕೊಂಡು ಹೋಗುತ್ತಿಲ್ಲ ಅಂತ. ಆದರೆ, ಬೇರೆ ಟ್ರಿಪ್‌ಗೆ ನೀನು ಕರ್ಕೊಂಡು ಹೋಗಿಲ್ಲ. ಬೇರೆಯವರು ಕರ್ಕೊಂಡು ಹೋಗ್ತಾರೆ. ನೀನು ನಿನ್ನ ಎಮೋಷನ್ಸ್‌ಗೆ ಸ್ಪಂದಿಸಿಲ್ಲ ಅಂದರೆ, ಬೇರೆ ಯಾರೋ ಕೊಡ್ತಾರೆ. ನೀನು ನಿನ್ನ ವಸ್ತುವನ್ನು ಕಾಪಾಡಿಕೋ ಅಂತ ಅನೇಕ ಬಾರಿ ಹೇಳಿದ್ದೇನೆ” ಎಂದು ಪ್ರಶಾಂತ್ ಸಂಬರಗಿ ಹೇಳಿದ್ದರು.

ʻʻನಿನ್ನೆ ನಗ್ತಾನೇ ಬಂದು ಹೋದರು. ಆದರೆ ಚಂದನ್‌ಗೆ ನೋವಾಗಿದೆ. ಇರುವ ಸ್ವಿಫ್ಟ್ ಕಾರು ಬಿಟ್ಟು ಬೆನ್ಜ್ ಕಾರು ಬೇಕು ಅಂದರೆ ನಾವೇನು ಮಾಡುವುದಕ್ಕೆ ಆಗುವುದಿಲ್ಲ. ಬೆನ್ಜ್ ಹಿಂದೆ ಹೋಗಿರುವಂತವರು, ದುಡ್ಡಿನ ಹಿಂದೆ ಹೋಗಿರುವಂತಹವರು ಅಥವಾ ಅವಕಾಶಗಳ ಹಿಂದೆ ಹೋಗಿರುವಂತಹವರು ಯಾರು ಅಂತ ಕರ್ನಾಟಕದ ಜನತೆಗೆ ಮುಂದೆ ಗೊತ್ತಾಗುತ್ತೆ. ಚಂದನ್‌ಗೆ ನಮ್ಮ ಬ್ರದರ್ಲಿ ಸಪೋರ್ಟ್, ಎಮೋಷನಲ್ ಸಪೋರ್ಟ್ ಇದೆʼʼಎಂದಿದ್ದರು ಪ್ರಶಾಂತ್‌ ಸಂಬರಗಿ.

Continue Reading

ಸಿನಿಮಾ

Niveditha Gowda: ಸೃಜನ್‌, ಸಂಬರಗಿ, ಜೀವನಾಂಶ, ಮಗು; ಎಲ್ಲದಕ್ಕೂ ಸ್ಪಷ್ಟನೆ ಕೊಟ್ಟ ಚಂದನ್‌-ನಿವೇದಿತಾ!

ಸುದ್ದಿಗೋಷ್ಠಿಗೆ ಇಬ್ಬರೂ ಪ್ರತ್ಯೇಕವಾಗಿ ಬಂದರು. ಡಿವೋರ್ಸ್‌ ವಿಚಾರ ಬಹಿರಂಗವಾದ ಬಳಿಕ ಕೆಲವು ವದಂತಿಗಳು ಹಬ್ಬಿದ್ದವು. ಈ ಬಗ್ಗೆ ಚಂದನ್‌ ಹಾಗೂ ನಿವೇದಿತಾ ಸ್ಪಷ್ಟನೆ ಕೊಟ್ಟಿದ್ದಾರೆ. ನಾನು ಮಾರ್ನಿಂಗ್ ಪರ್ಸನ್, ನಿವೇದಿತಾ ನೈಟ್ ಪರ್ಸನ್ ಇಲ್ಲಿಂದಲೇ ಸಮಸ್ಯೆ ಶುರುವಾಗಿತ್ತು. ನಾನು ಬೆಳಗ್ಗೆ ಬೇಗ ಎದ್ದೇಳ್ತಿನಿ, ನಿವೇದಿತಾ ಲೇಟ್ ಆಗಿ ಎದೆಳ್ತಾಳೆ. ಇಬ್ರಿಗೂ ಟೈಮ್ ಕೊಡೋಕೆ ಆಗುತ್ತಿರಲಿಲ್ಲ. 1 ವರ್ಷದಿಂದ ದೂರ ಆಗುವ ಬಗ್ಗೆ ಮಾತುಕಥೆ ಇತ್ತು. ಕ್ಯಾಂಡಿ ಕ್ರಶ್ ಸಿನಿಮಾದಲ್ಲಿ ಒಟ್ಟಿಗೆ ನಟಿಸಿದ್ದೇವೆ. ಒಂದು ದಿನದ ಶೂಟಿಂಗ್‌ ಬಾಕಿ ಇದೆ. ಇಬ್ಬರೂ ಭಾಗಿ ಆಗ್ತೇವೆ. ವೈಯಕ್ತಿಯ ಸಮಸ್ಯೆಯನ್ನು ಪ್ರೊಫೆಷನಲ್‌ಗೆ ತರೋದಿಲ್ಲʼʼಎಂದರು ಚಂದನ್‌.

VISTARANEWS.COM


on

Niveditha Gowda Chandan Shetty Divorce Case
Koo

ಬೆಂಗಳೂರು: ಚಂದನ್‌ ಶೆಟ್ಟಿ (Chandan Shetty) ಹಾಗೂ ನಿವೇದಿತಾ ಗೌಡ (Niveditha Gowda) ಡಿವೋರ್ಸ್‌ ಪಡೆದುಕೊಂಡಿರುವುದು ಗೊತ್ತೇ ಇದೆ. ಇನ್‌ಸ್ಟಾದಲ್ಲಿ ಪೋಸ್ಟ್‌ ಮೂಲಕ ಜೋಡಿ ಈ ಬಗ್ಗೆ ಅಧಿಕೃತ ಮಾಹಿತಿ ಕೂಡ ಹಂಚಿಕೊಂಡಿದೆ. ಈಗ ಇಬ್ಬರೂ ಒಟ್ಟಾಗಿ ಸುದ್ದಿಗೋಷ್ಠಿ ಕರೆದಿದ್ದಾರೆ. ಸುದ್ದಿಗೋಷ್ಠಿಗೆ ಇಬ್ಬರೂ ಪ್ರತ್ಯೇಕವಾಗಿ ಬಂದರು. ಡಿವೋರ್ಸ್‌ ವಿಚಾರ ಬಹಿರಂಗವಾದ ಬಳಿಕ ಕೆಲವು ವದಂತಿಗಳು ಹಬ್ಬಿದ್ದವು. ಈ ಬಗ್ಗೆ ಚಂದನ್‌ ಹಾಗೂ ನಿವೇದಿತಾ ಸ್ಪಷ್ಟನೆ ಕೊಟ್ಟಿದ್ದಾರೆ.

ಚಂದನ್‌ ಈ ಬಗ್ಗೆ ಮಾತನಾಡಿ ʻʻಮಾಧ್ಯಮದ ಮೇಲೆ ಇರುವ ಗೌರವ, ಸರಿಯಾದ ವಿಷಯವನ್ನು ಜನೆತೆಗೆ ತಲುಪಿಸುವ ಪ್ರಯತ್ನಕ್ಕೆ ನಾವು ಈಗ ನಿಮ್ಮ ಮುಂದೆ ಬಂದಿದ್ದೇನೆ. ಇದೇ 6ನೇ ತಾರಿಖು ಅರ್ಜಿ ಸಲ್ಲಿಸಿದ್ದೀವಿ. ನಮ್ಮಿಬ್ಬರಿಗೂ ನ್ಯಾಯಾಲಯ ಕಾನೂನಾತ್ಮಕವಾಗಿ ವಿಚ್ಛೇದನ ಕೊಟ್ಟಿದೆ. ತುಂಬ ಚೆನ್ನಾಗಿಯೇ ಇದ್ದರು, ಈಗ ಯಾಕೆ ದೂರ ಆದರು ಎಂದು ಹಲವರು ಪ್ರಶ್ನೆ ಕೇಳುತ್ತಲೇ ಇದ್ದರು. ಈ ಬಗ್ಗೆ ಈಗಾಗಲೇ ನಾವು ಸೋಷಿಯಲ್‌ ಮೀಡಿಯಾ ಮೂಲಕ ಪೋಸ್ಟ್‌ ಮಾಡಿದ್ದೇವೆ. ನಮ್ಮಿಬ್ಬರ ಬಗ್ಗೆ ಸಾಕಷ್ಟು ವದಂತಿಗಳು ಹಬ್ಬುತ್ತಿವೆʼʼಎಂದರು.

ನಮ್ಮಿಬ್ಬರ ಆಲೋಚನೆ, ಜೀವನಶೈಲಿ ಬೇರೆ

ʻʻಮೊದಲಿಗೆ ನಾವಿಬ್ಬರೂ ದೂರ ಆಗಲು ಕಾರಣ, ನಮ್ಮಿಬ್ಬರ ಆಲೋಚನೆಗಳು ಬೇರೆ ಬೇರೆ. ನಿವೇದಿತಾ ಜೀವನಶೈಲಿ ಇನ್ನೊಂದು ಆಯಾಮ ಇತ್ತು. ನಾವಿಬ್ಬರು ಕೂಡ ಹಲವು ವರ್ಷಗಳಿಂದ ಅರ್ಥ ಮಾಡಿಕೊಂಡು ಸಾಗಬೇಕು ಎಂದು ಪ್ರಯತ್ನ ಪಟ್ಟಿದ್ದೇವು. ಆದರೆ ಇಬ್ಬರ ಜೀವನ ಶೈಲಿ ಬೇರೆಯಾಗಿತ್ತು. ಯಾರಿಗೂ ಯಾರ ಮೇಲೂ ಫೋರ್ಸ್‌ ಮಾಡಿಕೊಂಡು ಬದುಕಬಾರದು. ಹೀಗಾಗಿ ನಾವಿಬ್ಬರು ಒಮ್ಮತದಿಂದ ಒಟ್ಟಿಗೆ ನಿರ್ಧಾರ ಮಾಡಿಕೊಂಡು, ಖುಷಿಯಾಗಿ ಇರಬೇಕು ಎಂದು ಈ ನಿರ್ಧಾರಕ್ಕೆ ಬಂದಿದ್ದೇವೆ. ನಮ್ಮಿಬ್ಬರ ಮಧ್ಯೆ ಯಾವುದೇ ವೈಮನಸ್ಸು ಇಲ್ಲ. ಇಬ್ಬರ ಮಧ್ಯೆಯೂ ಗೌರವ ಇದೆ. ನಮಗೆ ಸ್ನೇಹಿತರು ಹಾಗೇ ನಮ್ಮ ಇನ್‌ಸ್ಟಾ ಫಾಲೋವರ್ಸ್‌ ಸಪೋರ್ಟ್‌ ಮಾಡಿದ್ದೀರಾ ತುಂಬ ಧನ್ಯವಾದʼʼಎಂದರು ಚಂದನ್‌.

ಇದನ್ನೂ ಓದಿ: Chandan Shetty: ಚಂದನ್-ನಿವೇದಿತಾ ಸಂಬಂಧ ಸರಿ ಮಾಡ್ತಾರಾ ಧ್ರುವ ಸರ್ಜಾ? ಪ್ರಥಮ್ ಕೊಟ್ಟಿದ್ದಾರೆ ಕ್ಲೂ!

ಮಕ್ಕಳ ವಿಚಾರಕ್ಕೆ ದೂರ ಆದ್ರಾ?

ʻʻನಮ್ಮಿಬ್ಬರ ವೈಯಕ್ತಿಕ ವಿಚಾರವನ್ನು ಈಗ ಬೇರೆ ರೀತಿಯಲ್ಲಿ ಸೃಷ್ಟಿ ಮಾಡುತ್ತಿರುವ ಕಾರಣ ಇಲ್ಲಿಗೆ ಬಂದಿದ್ದೇವೆ. . ನಿವೇದಿತಾ ಅವರು ಜೀವನಾಂಶ ಪಡೆದಿಲ್ಲ. ಅವರಿಗೆ ನಾನು ಕೊಟ್ಟಿಲ್ಲ ʼʼಎಂದರು ಚಂದನ್‌. ʻʻಮಕ್ಕಳು ವಿಚಾರಕ್ಕೆ ನಾವಿಬ್ಬರೂ ದೂರ ಆಗಿದ್ದೇವೆ ಎಂಬುದು ಸುಳ್ಳು. ನಿವೇದಿತಾ ಅವರಿಗೆ ಸಿನಿಮಾದಲ್ಲಿ ಒಳ್ಳೆಯ ಕರಿಯರ್‌ ಇದೆ. ನನಗೂ ತುಂಬ ಪ್ಲ್ಯಾನ್ಸ್‌ ಇದೆ. ಈ ಎಲ್ಲ ವದಂತಿ ಸುಳ್ಳು. ಅವರು ಯಾರ ಮೇಲೆ ಡಿಪೆಂಡ್‌ ಆಗಿಲ್ಲ ಕೂಡ. ಮೂರನೇ ವ್ಯಕ್ತಿಯನ್ನು ಸಂಬಂಧಿಸಿ ಸಂಬಂಧ ಕೂಡ ಕಲ್ಪಿಸುತ್ತಿದ್ದಾರೆ. ಆದರೆ ಅವರು ನಮಗೆ ಫ್ಯಾಮಿಲಿ ತರ. ಆ ವ್ಯಕ್ತಿ ಜತೆ ಹೆಸರು ಸೇರಿಸಿದ್ದು ಸರಿಯಲ್ಲ. ಇದು ಕನ್ನಡಿಗರಿಗಾ ನಮಗೆ ಶೋಭೆ ಅಲ್ಲʼʼ ಎಂದರು.

ನಾನು ಯಾರಿಗೂ ಸ್ನೇಹಿತ ಅಲ್ಲ, ಆ ಸಂದರ್ಶನ ಸುಳ್ಳು!

ಬೇರೆ ಕಡೆ ನಾನು ಸಂದರ್ಶನ ಒಬ್ಬರು ಕೊಟ್ಟಿರುವುದು ನೋಡಿದೆ. ನಾನು ಯಾರಿಗೂ ಫ್ರೆಂಡ್‌ ಅಂದಿಲ್ಲ, ಆ ವ್ಯಕ್ತಿ ಜತೆ ನಾನು ಏನೂ ಆ ತರ ಮಾತನಾಡಿಲ್ಲ. ಈ ರೀತಿ ಅವರು ಮಾತನಾಡಿದ್ದು ಸುಳ್ಲು. ಸುಳ್ಳು ಹೇಳಿಕೆ ಕೊಟ್ಟಿದ್ದಾರೆ. ಬೇರೆ ಅವರ ವೈಯಕ್ತಿಕ ಜೀವನ ಬಗ್ಗೆ ಯಾಕೆ ಹೀಗೆ ಮಾತನಾಡುತ್ತಿದ್ದೀರಾ ಗೊತ್ತಿಲ್ಲ. ನಾವು ಪೋಷಕರು ಜತೆ ಮಾತನಾಡಿ ಈ ನಿರ್ಧಾರವನ್ನು ತೆಗೆದುಕೊಂಡಿದ್ದೇವೆ. ನಮ್ಮಿಬ್ಬರ ಮಧ್ಯೆ ಇಲ್ಲದೇ ಇರುವ ಉಹಾ ಪೋಹಾ ಬೀಜ ಬಿತ್ತಬೇಡಿ. ಇಲ್ಲಿಗೆ ಈ ವಿಚಾರ ನಿಲ್ಲಿಸಿ. ವದಂತಿಗಳಿಗೆ ಕಿವಿ ಕೊಡಬೇಡಿ. ಆದರೆ ನಾವು ಬ್ಯಾಲೆನ್ಸ್‌ ಮಾಡೋಕೆ ನೋಡಿದ್ವಿ ಆದರೆ ಆಗಿಲ್ಲʼʼಅಷ್ಟೇ ಅಂದರು.

ಬೆಂಬಲ ಇರಲಿ

ʻʻಕೊನೆದಾಗಿ ನಮಗೆ ಸಪೋರ್ಟ್‌ ಮಾಡಿದ ಫ್ಯಾನ್ಸ್‌ ಮಾಧ್ಯಮಕ್ಕೆ ಧನ್ಯವಾದ. ಇನ್ನೊಂದು ನನ್ನ ಬಗ್ಗೆ ವಿಡಿಯೊವೊಂದು ಹರಿದಾಡುತ್ತಿತ್ತು. ನಾನು ಡಿಪ್ರೆಶನ್‌ಗೆ ಹೋಗಿದ್ದೆ ಎಂದು. ಅದು 2023ರಲ್ಲಿ ಮಾಡಿದ ವಿಡಿಯೊ. ಆ ವಿಡಿಯೊ ನಾನು ಸಿನಿಮಾ ಬಗ್ಗೆ ಮಾತನಾಡಿದ್ದೆ. ಆದರೆ ಸೋಷಿಯಲ್‌ ಮೀಡಿಯಾದಲ್ಲಿ ಕೊನೆಯಲ್ಲಿ ನಾನು ಮಾತನಾಡಿದ ಮಾತುಗಳನ್ನು ಕಟ್‌ ಮಾಡಿ, ಈ ಬೇರೆ ವಿಚಾರಕ್ಕೆ ಲಿಂಕ್‌ ಮಾಡಿದ್ದಾರೆ. ಕೆಟ್ಟ ಸುದ್ದಿ ಬೇಗ ಹರಡುತ್ತೆ. ಈ ರೀತಿ ಅಪ್ರಪಚಾರ ಮಾಡಬೇಡಿ. ಸ್ವಲ್ಪ ಸಮಯ ಕೂಡ ನಾನು ತೆಗೆದುಕೊಳ್ಳುತ್ತಿದ್ದೇನೆ. ನನ್ನ ಸಿನಿಮಾಗಳು ಬರುತ್ತಿವೆ. ಹೊಸ ಸಾಂಗ್‌ಗಳು ಬರುತ್ತಿವೆ. ನಿವೇದಿತಾ ಅವರು ಕೂಡ ಹಲವು ಪ್ರಾಜೆಕ್ಟ್‌ಗಳಲ್ಲಿ ತೊಡಗಿಸಿಕೊಂಡಿದ್ದಾರೆ. ನಮ್ಮ ಮೇಲೆ ಸಹಕಾರ ಇರಲಿʼʼಎಂದರು.

ಇನ್ನು ನಿವೇದಿತಾ ಕೂಡ ʻʻವದಂತಿಗಳು ಕೇಳಿ ಬೇಜಾರಾಯ್ತು. ಫ್ಯಾಮಿಲಿ ಎಲ್ಲರಿಗೂ ಇರತ್ತೆ, ಬೇರೆಯವರ ಇಮೋಷನ್‌ ಹರ್ಟ್‌ ಮಾಡಬೇಡಿ. ಬೇಸ್‌ಲೆಸ್‌ ಆಗಿ ಏನೇನೊ ಹೇಳಬಾರದು. ನಾವಿಬ್ಬರೂ ಒಮ್ಮತದಿಂದ ನಿರ್ಧಾರ ಮಾಡಿಯೇ ಡಿವೋರ್ಸ್‌ ಪಡೆದುಕೊಂಡಿದ್ದೇವೆ. ನಾವು ಸೆಲೆಬ್ರಿಟಿಯಾಗಿ ನಮ್ಮ ಫಾಲ್ಲೋವರ್ಸ್ ಯಾರಿಗೂ ಡಿವೋರ್ಸ್ ಕೊಡಿ ಎಂದು ಪ್ರಚೋದನೆ ಕೊಡುತ್ತಿಲ್ಲ ʼʼಎಂದರು.

ಕೊನೆಯದಾಗಿ ಚಂದನ್‌ ಮಾತನಾಡಿ ʻʻನಾನು ಮಾರ್ನಿಂಗ್ ಪರ್ಸನ್, ನಿವೇದಿತಾ ನೈಟ್ ಪರ್ಸನ್ ಇಲ್ಲಿಂದಲೇ ಸಮಸ್ಯೆ ಶುರುವಾಗಿತ್ತು. ನಾನು ಬೆಳಗ್ಗೆ ಬೇಗ ಎದ್ದೇಳ್ತಿನಿ, ನಿವೇದಿತಾ ಲೇಟ್ ಆಗಿ ಎದೆಳ್ತಾಳೆ. ಇಬ್ರಿಗೂ ಟೈಮ್ ಕೊಡೋಕೆ ಆಗುತ್ತಿರಲಿಲ್ಲ. 1 ವರ್ಷದಿಂದ ದೂರ ಆಗುವ ಬಗ್ಗೆ ಮಾತುಕಥೆ ಇತ್ತು. ಕ್ಯಾಂಡಿ ಕ್ರಶ್ ಸಿನಿಮಾದಲ್ಲಿ ಒಟ್ಟಿಗೆ ನಟಿಸಿದ್ದೇವೆ. ಒಂದು ದಿನದ ಶೂಟಿಂಗ್‌ ಬಾಕಿ ಇದೆ. ಇಬ್ಬರೂ ಭಾಗಿ ಆಗ್ತೇವೆ. ವೈಯಕ್ತಿಯ ಸಮಸ್ಯೆಯನ್ನು ಪ್ರೊಫೆಷನಲ್‌ಗೆ ತರೋದಿಲ್ಲʼʼಎಂದರು ಚಂದನ್‌.

Continue Reading

ಸಿನಿಮಾ

Yuva Rajkumar: ಹೆಣ್ಣು ಹೆತ್ತವರು ಏನ್‌ ಮಾಡೋದು ಹೇಳಿ; ಡಿವೋರ್ಸ್‌ ನೋಟಿಸ್‌ಗೆ ಶ್ರೀದೇವಿ ತಂದೆ ಭೈರಪ್ಪ ಬೇಸರ

Yuva Rajkumar: ಯುವ ಮದುವೆಯಾಗಿ ನಾಲ್ಕು ವರ್ಷಗಳ ಬಳಿಕ ಡಿವೋರ್ಸ್‌ ಪಡೆದುಕೊಳ್ಳಲು ಮುಂದಾಗಿದ್ದಾರೆ. ಶ್ರೀದೇವಿ ಅವರು ರಾಜ್ ಅಕಾಡೆಮಿ ನಡೆಸಿಕೊಂಡು ಹೋಗುತ್ತಿದ್ದರು. ಮೈಸೂರು ಮೂಲದ ಹುಡುಗಿ ಶ್ರೀದೇವಿಯನ್ನ ವರಿಸಿದ್ದ ಯುವ ಈಗ ಪತ್ನಿ ಮಾನಸಿಕವಾಗಿ ಟಾರ್ಚರ್ ಕೊಡುತ್ತಿದ್ದಾರೆ ಎಂದು ಆರೋಪ ಮಾಡಿ ಕೇಸ್ ಕೂಡ ದಾಖಲಿಸಿದ್ದಾರೆ. ಶ್ರೀದೇವಿಗೆ ಈಗಾಗಲೇ ಯುವ ನೋಟಿಸ್‌ ಕೊಟ್ಟಿದ್ದಾರೆ.

VISTARANEWS.COM


on

Yuva Rajkumar
Koo

ಬೆಂಗಳೂರು: ಡಾ.ರಾಜ್‌ಕುಮಾರ್‌ ಅವರ ಕುಟುಂಬದ ಕುಡಿ, ರಾಘವೇಂದ್ರ ರಾಜ್‌ಕುಮಾರ್‌ (Raghavendra Rajkumar) ಅವರ ಮೊಮ್ಮಗ ಯುವ ರಾಜ್‌ಕುಮಾರ್‌ (Yuva Rajkumar) ಅವರು ಪತ್ನಿ ಶ್ರೀದೇವಿ ಭೈರಪ್ಪ ಅವರಿಗೆ ಡಿವೋರ್ಸ್‌ ನೋಟಿಸ್‌ ಕಳುಹಿಸಿದ್ದಾರೆ. ಸ್ಯಾಂಡಲ್‌ವುಡ್‌ನ ಚಂದನ್‌ ಶೆಟ್ಟಿ ಹಾಗೂ ನಿವೇದಿತಾ ಗೌಡ ಅವರ ವಿಚ್ಛೇದನದ ಬೆನ್ನಲ್ಲೇ ದೊಡ್ಮನೆಯ ಕುಡಿಯೂ ಪತ್ನಿಗೆ ವಿಚ್ಛೇದನ ನೀಡಲು ಮುಂದಾಗಿರುವುದು ಭಾರಿ ಸುದ್ದಿಯಾಗಿದೆ. ಇದರ ಮಧ್ಯೆಯೇ, ಶ್ರೀದೇವಿ ಅವರ ತಂದೆ ಬಿ. ಭೈರಪ್ಪ ಅವರು ವಿಸ್ತಾರ ನ್ಯೂಸ್‌ ಜತೆ ಮಾತನಾಡಿದ್ದು, “ವಿಚ್ಛೇದನದ ವಿಚಾರ ನಮಗೆ ಮೊದಲೇ ಗೊತ್ತಿತ್ತು” ಎಂದು ತಿಳಿಸಿದ್ದಾರೆ.

ಮೈಸೂರಿನಲ್ಲಿ ಬಿ. ಭೈರಪ್ಪ ಅವರು ವಿಸ್ತಾರ ನ್ಯೂಸ್‌ ಜತೆ ಮಾತನಾಡಿದರು. “ಯುವ ರಾಜ್‌ಕುಮಾರ್‌ ಹಾಗೂ ಶ್ರೀದೇವಿ ಪ್ರೀತಿಸಿ ಮದುವೆಯಾಗಿದ್ದರು. ನನ್ನ ಮಗಳನ್ನು ಅವರೇ ಉನ್ನತ ವ್ಯಾಸಂಗಕ್ಕಾಗಿ ವಿದೇಶಕ್ಕೆ ಕಳುಹಿಸಿದ್ದರು. ವಿದ್ಯಾಭ್ಯಾಸ ಮುಗಿಸಿ ಬಂದ ಬಳಿಕ ಇಬ್ಬರೂ ವಿಚ್ಛೇದನ ಪಡೆಯಲಿದ್ದಾರೆ. ವಿಚ್ಛೇದನದ ಬಗ್ಗೆ ನಮಗೆ ಮೊದಲೇ ಗೊತ್ತಿತ್ತು” ಎಂಬುದಾಗಿ ಯುವ ರಾಜ್‌ಕುಮಾರ್‌ ಅವರ ಮಾವ ಬಿ.ಭೈರಪ್ಪ ತಿಳಿಸಿದ್ದಾರೆ.

“ಯುವ ರಾಜ್‌ಕುಮಾರ್‌ ಮೈಸೂರಿಗೆ ಬಂದಿದ್ದ. ಆದರೆ, ಇದರ ಬಗ್ಗೆ ಆತ ಯಾವುದೇ ಮಾತನಾಡಿರಲಿಲ್ಲ. ಶ್ರೀದೇವಿ, ವಿಚ್ಛೇದನದ ಕುರಿತು ಮಾತನಾಡಿರಲಿಲ್ಲ. ಈಗ ಡಿವೋರ್ಸ್‌ ನೋಟಿಸ್‌ ಕಳುಹಿಸಿದ್ದಾನೆ. ನಾವು ಕೂಡ ಕಾನೂನಿನ ಮೂಲಕ ಉತ್ತರ ನೀಡುತ್ತೇವೆ. ಹೆಣ್ಣು ಹೆತ್ತವರು ಏನ್‌ ಮಾಡ್ಬೇಕು ಹೇಳಿ. ಯಾರೂ ದುಡುಕಬಾರದು. ನನ್ನ ಮಗಳಿಂದ ಯಾವುದೇ ಕಿರುಕುಳ ಆಗಿಲ್ಲ.” ಎಂದು ಭೈರಪ್ಪ ಹೇಳಿದ್ದಾರೆ.

ಯುವ ರಾಜ್‌ಕುಮಾರ್‌ ಅವರು ಪತ್ನಿ ಶ್ರೀದೇವಿಯಿಂದ ವಿಚ್ಛೇದನ ಕೋರಿ ಅರ್ಜಿ ಸಲ್ಲಿಸಿದ್ದಾರೆ. ರಾಘವೇಂದ್ರ ರಾಜಕುಮಾರ್ ಅವರ ಪುತ್ರ ಯುವ ರಾಜ್‌ಕುಮಾರ್‌ ಭಾರತೀಯ ವಿವಾಹ ಕಾಯ್ದೆ 13(1)ಅಡಿ ವಿಚ್ಚೇದನಕ್ಕೆ ಅರ್ಜಿ ಸಲ್ಲಿಸಿದ್ದಾರೆ. ಜೂನ್​ 6ರಂದು ಕೌಟುಂಬಿಕ ನ್ಯಾಯಾಲಯಕ್ಕೆ ಅರ್ಜಿ ಸಲ್ಲಿಸಿದ್ದರು ಎಂದು ವರದಿಯಾಗಿದೆ. ಹೆಂಡತಿಯಿಂದ ಅಗೌರವ ಹಾಗೂ ಮಾನಸಿಕ ಕ್ರೌರ್ಯ ಎದುರಿಸುತ್ತಿದ್ದೆ ಎಂದು ಯುವ ಅರ್ಜಿ ಸಲ್ಲಿಕೆ ಮಾಡಿದ್ದಾರೆ. ಪತ್ನಿ ಮಾನಸಿಕವಾಗಿ ಟಾರ್ಚರ್ ಕೊಡುತ್ತಿದ್ದಾರೆ ಎಂದು ಆರೋಪ ಮಾಡಿ ಯುವ ಕೇಸ್ ಕೂಡ ದಾಖಲು ಮಾಡಿದ್ದಾರೆ. ನೋಟಿಸ್ ಜಾರಿ ಮಾಡಿರುವ ನ್ಯಾಯಾಲಯವು ಜುಲೈ 4ಕ್ಕೆ ವಿಚಾರಣೆ ಮುಂದೂಡಿದೆ.

ಸದ್ಯ ಶ್ರೀದೇವಿ ಅಮೆರಿಕದಲ್ಲಿ ಇದ್ದಾರೆ ಎನ್ನಲಾಗಿದೆ. ಇಬ್ಬರ ಮದುವೆಗೆ ರಾಘವೇಂದ್ರ ದಂಪತಿಯ ವಿರೋಧ ಇತ್ತು ಎಂದು ಮೂಲ ತಿಳಿಸಿದೆ. ಇಬ್ಬರ ಮದುವೆಗೆ ರಾಘವೇಂದ್ರ ದಂಪತಿಯ ವಿರೋಧ ಇದ್ದರೂ, ಪುನೀತ್‌ ರಾಜ್ ಕುಮಾರ್ ಮುಂದೆ ನಿಂತು ಮದುವೆ ಮಾಡಿಸಿದ್ದರು ಎನ್ನಲಾಗಿದೆ. 2019ರಲ್ಲಿ ಈ ಜೋಡಿ ಪ್ರೀತಿಸಿ ಮದುವೆಯಾಗಿತ್ತು. ಅಂದಹಾಗೆ ಶ್ರೀದೇವಿ ಮತ್ತು ಯುವ ರಾಜ್ ಕುಮಾರ್ ಪರಸ್ಪರ 7 ವರ್ಷಗಳಿಂದ ಪರಿಚಿತರಾಗಿದ್ದರು. ಶ್ರೀದೇವಿ ಅವರು ವಿನಯ್ ರಾಜ್ ಕುಮಾರ್ ಅಭಿನಯದ ರನ್ ಆಂಟನಿ ಸಿನಿಮಾದ ಪ್ರಚಾರದಲ್ಲೂ ಭಾಗಿಯಾಗಿದ್ದರು. ಇನ್ನೂ ಪವರ್ ಸ್ಟಾರ್‌ ಪುನೀತ್‌ ನಿಧನರಾದಾಗ ಮುಂದೆ ನಿಂತು ಸಾಕಷ್ಟು ಕೆಲಸಗಳು ಮಾಡಿದ್ದರು. ಕೆಲವು ದಿನಗಳಿಂದ ಇಬ್ಬರೂ ಎಲ್ಲಿಯೂ ಒಟ್ಟಿಗೆ ಕಾಣಿಸಿಕೊಂಡಿಲ್ಲ. ಇನ್ನೂ ಯುವ ಸಿನಿಮಾ ಪ್ರಚಾರದಲ್ಲಿ ಪತ್ನಿ ಶ್ರೀದೇವಿ ಎಲ್ಲಿಯೂ ಕಾಣಿಸಿಕೊಂಡಿರಲಿಲ್ಲ. ಕಳೆದ ಆರೇಳು ತಿಂಗಳಿಂದ ದೊಡ್ಮನೆಯಿಂದ ಶ್ರೀದೇವಿ ಭೈರಪ್ಪ ದೂರವಾಗಿದ್ದರು ಎಂದು ತಿಳಿದುಬಂದಿದೆ.

ಇದನ್ನೂ ಓದಿ: Yuva Rajkumar: ರಾಘಣ್ಣ ದಂಪತಿ ವಿರೋಧದ ನಡುವೆಯೂ ಯುವನಿ​ಗೆ ಮದ್ವೆ ಮಾಡಿಸಿದ್ದು ‘ಅಪ್ಪು’!

Continue Reading
Advertisement
Yuva Rajkumar
ಕರ್ನಾಟಕ20 mins ago

Yuva Rajkumar: ‘ಅನೈತಿಕ ಸಂಬಂಧ’ ಎಂದು ಯುವ ಪರ ವಕೀಲ ಆರೋಪ; ತಿರುಗೇಟು ಕೊಟ್ಟ ಶ್ರೀದೇವಿ!

Yuva Rajkumar
ಪ್ರಮುಖ ಸುದ್ದಿ1 hour ago

Yuva Rajkumar: ಹಲ್ಲು ಉಜ್ಜಲ್ಲ, ಸ್ನಾನ ಮಾಡಲ್ಲ, ಫಿಟ್ ಇಲ್ಲ ಎಂದು ಕಿರುಕುಳ ಕೊಡುತ್ತಿದ್ದ ಯುವ ಪತ್ನಿ!: ವಕೀಲರ ಆರೋಪ

Minister Dinesh Gundurao instructed to prepare for the disaster management that may occur on the coast during rainy season.
ದಕ್ಷಿಣ ಕನ್ನಡ2 hours ago

Mangalore News: ಸಿಡಿಲ ಅಪಾಯ ಇರುವ ಸ್ಥಳಗಳಲ್ಲಿ ಮಿಂಚು ಪ್ರತಿಬಂಧಕ ವ್ಯವಸ್ಥೆ; ಸರ್ಕಾರದ ನಿರ್ಧಾರ

Inauguration of Pushpam Ayurveda Wellness Center in Bengaluru
ಬೆಂಗಳೂರು2 hours ago

Bengaluru News: ಬೆಂಗಳೂರಿನಲ್ಲಿ ಪುಷ್ಪಮ್ ಆಯುರ್ವೇದ ವೆಲ್‌ನೆಸ್ ಸೆಂಟರ್‌ಗೆ ಚಾಲನೆ

Kalki 2898 AD Trailer Released on Vyjayanthi Movies YouTube Channel
ಕರ್ನಾಟಕ2 hours ago

Kalki 2898 AD: ಮೈನವಿರೇಳಿಸುವ ‘ಕಲ್ಕಿ 2898 AD’ ಚಿತ್ರದ ಟ್ರೇಲರ್‌ ರಿಲೀಸ್‌!

Mohan Bhagwat
ದೇಶ2 hours ago

Mohan Bhagwat: ಮಣಿಪುರ ಹಿಂಸೆ ನಿಲ್ಲಿಸಿ; ಅಧಿಕಾರ ಹಿಡಿದ ಮೋದಿಗೆ ಟಾಸ್ಕ್‌ ಕೊಟ್ಟ ಮೋಹನ್‌ ಭಾಗವತ್!

Stabbing Case
ಕರ್ನಾಟಕ3 hours ago

Stabbing Case: ಬಿಜೆಪಿ ಕಾರ್ಯಕರ್ತರಿಗೆ ಚೂರಿ ಇರಿತ ಪ್ರಕರಣ; ಐವರು ಆರೋಪಿಗಳ ಬಂಧನ

Yuva Rajkumar
ಕರ್ನಾಟಕ3 hours ago

Yuva Rajkumar: ಶ್ರೀದೇವಿ ಭೈರಪ್ಪಗೆ ಅಕ್ರಮ ಸಂಬಂಧ; ಯುವ ರಾಜ್‌ಕುಮಾರ್ ಪರ ವಕೀಲ ಸ್ಫೋಟಕ ಹೇಳಿಕೆ

Modi 3.0 Cabinet
ದೇಶ4 hours ago

Modi 3.0 Cabinet: ಮೋದಿಗೆ ಬಾಹ್ಯಾಕಾಶ, ಅಮಿತ್‌ ಶಾಗೆ ಗೃಹ ಖಾತೆ; ಇಲ್ಲಿದೆ 72 ಸಚಿವರು ಹಾಗೂ ಖಾತೆಗಳ ಪಟ್ಟಿ

ಕರ್ನಾಟಕ4 hours ago

Modi 3.0 Cabinet: ಜೋಶಿಗೆ ಆಹಾರ, ಎಚ್‌ಡಿಕೆಗೆ ಬೃಹತ್ ಕೈಗಾರಿಕೆ‌, ನಿರ್ಮಲಾಗೆ ವಿತ್ತ, ಸೋಮಣ್ಣಗೆ ಡಬಲ್‌ ಖುಷಿ, ಶೋಭಾಗೆ MSME

Sharmitha Gowda in bikini
ಕಿರುತೆರೆ8 months ago

Geetha Serial Kannada: ನಿದ್ದೆ ಕದ್ದ ಚೋರಿ! ನಟಿ `ಭಾನುಮತಿ’ ಹಾಟ್‌ ಪೋಟೊಗಳಿಗೆ ಫ್ಯಾನ್ಸ್ ಫುಲ್ ಫಿದಾ

Kannada Serials
ಕಿರುತೆರೆ8 months ago

Kannada Serials TRP: 2ನೇ ಸ್ಥಾನದಲ್ಲಿ 2 ಧಾರಾವಾಹಿಗಳು; ಟಿಆರ್‌ಪಿ ರೇಸ್‌ನಲ್ಲಿಲ್ಲ ಭಾಗ್ಯಲಕ್ಷ್ಮೀ!

Bigg Boss- Saregamapa 20 average TRP
ಕಿರುತೆರೆ8 months ago

Kannada Serials TRP: ಏಳನೇ ಸ್ಥಾನಕ್ಕೆ ʻಅಮೃತಧಾರೆʼ ಕುಸಿತ; ಬಿಗ್‌ ಬಾಸ್‌-ಸರಿಗಮಪ ಟಿಆರ್‌ಪಿ ಎಷ್ಟು?

galipata neetu
ಕಿರುತೆರೆ6 months ago

Kanyadana Serial: ಕಿರುತೆರೆಗೆ ಮತ್ತೆ ಎಂಟ್ರಿ ಕೊಟ್ಟ ʻಗಾಳಿಪಟʼ ಖ್ಯಾತಿಯ ʻನೀತುʼ!

Kannada Serials
ಕಿರುತೆರೆ9 months ago

Kannada Serials TRP: ನಾಲ್ಕನೇ ಸ್ಥಾನಕ್ಕೆ ಕುಸಿತ ಕಂಡ ʻಸೀತಾ ರಾಮʼ; ಟಿಆರ್‌ಪಿ ರೇಸ್‌ಗೆ ʻಭಾಗ್ಯಲಕ್ಷ್ಮಿʼ ಬ್ಯಾಕ್‌!

Kannada Serials
ಕಿರುತೆರೆ8 months ago

Kannada Serials TRP: ಟಿಆರ್‌ಪಿಯಲ್ಲಿ ʻಭಾಗ್ಯಲಕ್ಷ್ಮೀʼ ಹವಾ; ʻಪುಟ್ಟಕ್ಕನ ಮಕ್ಕಳುʼ ಧಾರಾವಾಹಿಗೆ ಸಂಕಷ್ಟ!

Bigg Boss' dominates TRP; Sita Rama fell to the sixth position
ಕಿರುತೆರೆ8 months ago

Kannada Serials TRP: ಟಿಆರ್‌ಪಿಯಲ್ಲಿ ʻಬಿಗ್ ಬಾಸ್ʼದೇ ಮೇಲುಗೈ; 6ನೇ ಸ್ಥಾನಕ್ಕೆ ಕುಸಿದ ʻಸೀತಾ ರಾಮʼ

geetha serial Dhanush gowda engagement
ಕಿರುತೆರೆ6 months ago

Dhanush Gowda: ಗೀತಾ ಧಾರಾವಾಹಿ ನಟನ ನಿಶ್ಚಿತಾರ್ಥ; ಭವ್ಯಾಳ ಕಮೆಂಟ್‌ ಬಾಕ್ಸ್‌ ಆಫ್‌!

varun
ಕಿರುತೆರೆ7 months ago

Brindavana Serial: ʼಬೃಂದಾವನʼ ಧಾರಾವಾಹಿಯಲ್ಲಿ ದೊಡ್ಡ ಟ್ವಿಸ್ಟ್‌; ಪ್ರಮುಖ ಪಾತ್ರಧಾರಿಯೇ ಬದಲು

Kannada Serials
ಕಿರುತೆರೆ9 months ago

Kannada Serials TRP: ಟಿಆರ್‌ಪಿಯಲ್ಲಿ ಏರಿಕೆ ಕಂಡ ʻಅಮೃತಧಾರೆʼ; ʻಗಟ್ಟಿಮೇಳʼಕ್ಕೆ ನಾಲ್ಕನೇ ಸ್ಥಾನ!

Karnataka weather Forecast
ಮಳೆ8 hours ago

Karnataka Weather : ಭಾರಿ ಮಳೆಗೆ ಮನೆ ಗೋಡೆ ಕುಸಿದು ಎಮ್ಮೆಗಳು ಸಾವು; ಆಕಳಿನ ಜೀವ ತೆಗೆದ ವಿದ್ಯುತ್‌ ತಂತಿ

Karnataka weather Forecast
ಮಳೆ3 days ago

Karnataka weather : ಮಳೆಯಲ್ಲೆ ತಪಸ್ಸಿಗೆ ಕುಳಿತ ವೃದ್ಧ; ಇನ್ನೊಂದು ವಾರ ನಾನ್‌ ಸ್ಟಾಪ್‌ ವರುಣನ ಅಬ್ಬರ

Sigandur launch
ಶಿವಮೊಗ್ಗ3 days ago

Sigandur launch: ಸಿಗಂದೂರು ಲಾಂಚ್‌ನಲ್ಲಿ ಭಾರಿ ವಾಹನಗಳಿಗೆ ನಿರ್ಬಂಧ

Karnataka Rain
ಮಳೆ4 days ago

Karnataka Rain : ಭಾರಿ ಮಳೆಗೆ ಮರ ಬಿದ್ದು ಮೇಕೆಗಳು ಸಾವು; ಸಿಡಿಲಿಗೆ ಎಲೆಕ್ಟ್ರಿಕ್‌ ಅಂಗಡಿ ಸುಟ್ಟು ಭಸ್ಮ

Lok Sabha Election Result 2024 Live
ದೇಶ7 days ago

Lok Sabha Election Result 2024 Live: ಲೋಕಸಭೆ ಚುನಾವಣೆ ಫಲಿತಾಂಶದ ಲೈವ್‌ ಇಲ್ಲಿ ವೀಕ್ಷಿಸಿ

Karnataka Rain
ಮಳೆ1 week ago

Karnataka Rain : 133 ವರ್ಷದ ರೆಕಾರ್ಡ್ ಬ್ರೇಕ್ ಮಾಡಿದ ʻಬೆಂಗಳೂರು ಮಳೆʼ

Snake Rescue Snakes spotted in heavy rain
ಮಳೆ1 week ago

Snake Rescue: ಮಳೆ ನೀರಿನಲ್ಲಿ ಹರಿದು ಬಂದು ಬೈಕ್‌ನಲ್ಲಿ ಸೇರಿಕೊಂಡ ಹಾವು; ಮನೆಗಳಲ್ಲೂ ಪ್ರತ್ಯಕ್ಷ

Karnataka Rain
ಮಳೆ1 week ago

Karnataka Rain : ವೀಕೆಂಡ್‌ ಮೋಜಿಗೆ ವರುಣ ಅಡ್ಡಿ; ಭಾನುವಾರ ಸಂಜೆಗೆ ಮಳೆ ಕಾಟ

Liquor ban
ಬೆಂಗಳೂರು1 week ago

Liquor Ban : ಮುಂದಿನ ಏಳು ದಿನಗಳಲ್ಲಿ ನಾಲ್ಕೂವರೆ ದಿನ ಬಾರ್ ಕ್ಲೋಸ್; ಎಣ್ಣೆ ಸಿಗೋದು ಯಾವ ದಿನ?

Assault Case in Shivamogga
ಕ್ರೈಂ2 weeks ago

Assault Case : ಶಿವಮೊಗ್ಗದಲ್ಲಿ ಮತ್ತೆ ಬಾಲ ಬಿಚ್ಚಿದ ಪುಂಡರು; ಗಾಂಜಾ ನಶೆಯಲ್ಲಿ ವಾಹನಗಳು ಪೀಸ್‌ ಪೀಸ್‌

ಟ್ರೆಂಡಿಂಗ್‌