The Great Indian Kapil Show: ಬರ್ತಾ ಇದೆ ʻದಿ ಗ್ರೇಟ್ ಇಂಡಿಯನ್ ಕಪಿಲ್ ಶೋʼ: ಟಿವಿಲಿ ಅಲ್ಲ ಒಟಿಟಿಯಲ್ಲಿ! - Vistara News

ಸ್ಯಾಂಡಲ್ ವುಡ್

The Great Indian Kapil Show: ಬರ್ತಾ ಇದೆ ʻದಿ ಗ್ರೇಟ್ ಇಂಡಿಯನ್ ಕಪಿಲ್ ಶೋʼ: ಟಿವಿಲಿ ಅಲ್ಲ ಒಟಿಟಿಯಲ್ಲಿ!

The Great Indian Kapil Show: ಈ ಮೂಲಕ ಸೋನಿ ಟಿವಿಯನ್ನು ತೊರೆದ ಬಗ್ಗೆ ಘೋಷಣೆ ಮಾಡಿದ್ದರು. ‘ದಿ ಗ್ರೇಟ್ ಇಂಡಿಯನ್ ಕಪಿಲ್ ಶೋ’ನಲ್ಲಿ ಇನ್ನೂ ಹಲವರು ಇರಲಿದ್ದಾರೆ. ಇದರ ಪ್ರಮೋಷನಲ್ ಟೀಸರ್ ಗಮನ ಸೆಳೆದೆ.

VISTARANEWS.COM


on

The Great Indian Kapil Show begins on March 30
ಮಹತ್ವದ, ಕುತೂಹಲಕರ ಸುದ್ದಿಗಾಗಿ ಫಾಲೊ ಮಾಡಿ
Koo

ಬೆಂಗಳೂರು: ನಟ ಕಪಿಲ್ ಶರ್ಮಾ ‘ಫ್ಯಾಮಿಲಿ ಟೈಮ್ ವಿತ್ ಕಪಿಲ್ ಶರ್ಮಾ’, ‘ದಿ ಕಪಿಲ್ ಶರ್ಮಾ ಶೋ’ ಹೀಗೆ ನಾನಾ ಹೆಸರುಗಳಲ್ಲಿ ಅವರು ಶೋಗಳನ್ನು ನಡೆಸಿಕೊಟ್ಟಿದ್ದಾರೆ. ‘ದಿ ಗ್ರೇಟ್ ಇಂಡಿಯನ್ ಕಪಿಲ್ ಶೋ’ (The Great Indian Kapil Show) ಎಂದು ಹೊಸ ಹೆಸರಿನೊಂದಿಗೆ ಒಟಿಟಿಯತ್ತ ಮುಖ ಮಾಡಿದ್ದಾರೆ. ಈ ಮೊದಲು ಕಪಿಲ್ ಶರ್ಮಾ ಶೋಗಳು ಸೋನಿ ಟಿವಿಯಲ್ಲಿ ಪ್ರಸಾರ ಕಾಣುತ್ತಿತ್ತು. ಆದರೆ ಈ ಬಾರಿ ಒಟಿಟಿಗೆ ಎಂಟ್ರಿ ಕೊಟ್ಟಿದ್ದಾರೆ. ಮಾರ್ಚ್ 30ರಿಂದ ಸ್ಟ್ರೀಮಿಂಗ್ ಪ್ರಾರಂಭವಾಗಲಿದೆ.

ಕಪಿಲ್ ಶರ್ಮಾ ಹಾಗೂ ಸುನಿಲ್ ಗ್ರೋವರ್ ಮಧ್ಯೆ ಕಿರಿಕ್ ಆಗಿದ್ದರಿಂದ ಇಬ್ಬರೂ ದೂರ ಆಗಿದ್ದರು. ಈಗ ಸುಮಾರು ಆರು ವರ್ಷಗಳ ಬಳಿಕ ಇಬ್ಬರೂ ಮತ್ತೆ ಒಂದಾಗಿದ್ದಾರೆ. ಇತ್ತೀಚೆಗಷ್ಟೇ ಕಪಿಲ್ ಶರ್ಮಾ ಅವರು ಒಂದು ಹೇಳಿಕೆ ನೀಡಿದ್ದರು. ‘ಮನೆ ಬದಲಾಗಿದೆ ಆದರೆ ಕುಟುಂಬವಲ್ಲ’ ಎಂದಿದ್ದರು. ಈ ಮೂಲಕ ಸೋನಿ ಟಿವಿಯನ್ನು ತೊರೆದ ಬಗ್ಗೆ ಘೋಷಣೆ ಮಾಡಿದ್ದರು. ‘ದಿ ಗ್ರೇಟ್ ಇಂಡಿಯನ್ ಕಪಿಲ್ ಶೋ’ನಲ್ಲಿ ಇನ್ನೂ ಹಲವರು ಇರಲಿದ್ದಾರೆ. ಇದರ ಪ್ರಮೋಷನಲ್ ಟೀಸರ್ ಗಮನ ಸೆಳೆದೆ.

ಕಾರ್ಯಕ್ರಮದಲ್ಲಿ ಕೃಷ್ಣ ಅಭಿಷೇಕ್, ಕಿಕು ಶಾರದಾ, ಅರ್ಚನಾ ಪುರಾಣ್ ಸಿಂಗ್, ಸುನಿಲ್ ಗ್ರೋವರ್ ಮತ್ತು ರಾಜೀವ್ ಠಾಕೂರ್ ಅವರು ಕಪಿಲ್ ಜತೆಗೂಡಲಿದ್ದಾರೆ. ಇದು ಮಾರ್ಚ್ 30ರಿಂದ ಪ್ರತಿ ವಾರ ಸ್ಟ್ರೀಮ್ ಆಗುತ್ತದೆ. ಕಾರ್ಯಕ್ರಮದ ಕುರಿತು ಮಾತನಾಡಿದ ಕಪಿಲ್ ಶರ್ಮಾ, “‘ಮನೆ ಬದಲಾಗಿದೆ ಆದರೆ ಕುಟುಂಬವಲ್ಲ. ಭಾರತದಲ್ಲಿ ಮಾತ್ರವಲ್ಲದೆ ಜಗತ್ತಿನಾದ್ಯಂತ ನಮ್ಮ ಅಭಿಮಾನಿಗಳನ್ನು ರಂಜಿಸಲು ಎಲ್ಲರೂ ಸಜ್ಜಾಗಿದ್ದೇವೆ. ದಿ ಗ್ರೇಟ್ ಇಂಡಿಯನ್ ಕಪಿಲ್ ಶೋ ಮಾರ್ಚ್ 30 ರಿಂದ ನೆಟ್‌ಫ್ಲಿಕ್ಸ್‌ನಲ್ಲಿ ಮಾತ್ರʼʼ ಎಂದು ಹೇಳಿಕೊಂಡಿದ್ದಾರೆ.

ಇದನ್ನೂ ಓದಿ: The Kapil Sharma Show: 6 ವರ್ಷದ ಮುನಿಸು ಮರೆತು ಒಟ್ಟಿಗೆ ಪಾರ್ಟಿ ಮಾಡಿದ ಕಪಿಲ್‌ ಶರ್ಮಾ, ಸುನಿಲ್‌ ಗ್ರೋವರ್!

ʻಗ್ರೇಟ್ ಇಂಡಿಯನ್ ಕಪಿಲ್ ಶೋʼ ವೈವಿಧ್ಯಮಯ ಚಾಟ್ ಶೋ ಆಗಿದೆ. ಪ್ರತಿ ವಾರ ಪ್ರಮುಖ ಸೆಲೆಬ್ರಿಟಿ ಅತಿಥಿಗಳು ಬರುತ್ತಾರೆ. ಈ ಶೋ ಮಾರ್ಚ್ 30ರಿಂದ ಈ ಶೋ ಆರಂಭ ಆಗಲಿದೆ. ಪ್ರತಿ ಶನಿವಾರ ರಾತ್ರಿ 8 ಗಂಟೆಗೆ ಶೋ ಪ್ರಸಾರ ಕಾಣಲಿದೆ.

ಇಬ್ಬರ ಮಧ್ಯೆ ಏಕೆ ಜಗಳ?

ಕಪಿಲ್‌ ಶರ್ಮಾ ಹಾಗೂ ಸುನಿಲ್‌ ಗ್ರೋವರ್‌ ಅವರ ಮಧ್ಯೆ 2017ರಲ್ಲಿ ಭಿನ್ನಾಭಿಪ್ರಾಯ ಮೂಡಿತ್ತು. ಆಸ್ಟ್ರೇಲಿಯಾದಲ್ಲಿ ಶೋ ಮುಗಿಸಿ, ಮುಂಬೈಗೆ ಆಗಮಿಸುವಾಗ ವಿಮಾನದಲ್ಲಿಯೇ ಕಪಿಲ್‌ ಶರ್ಮಾ ಅವರು ಸುನಿಲ್‌ ಗ್ರೋವರ್‌ ಅವರಿಗೆ ಬೈದಿದ್ದರು. ಇದಾದ ಬಳಿಕ ಇಬ್ಬರೂ ವಾಗ್ವಾದ ನಡೆಸಿದ್ದರು ಎಂಬ ಮಾತುಗಳು ಕೇಳಿಬಂದಿದ್ದವು. ನಂತರ ಸುನಿಲ್‌ ಗ್ರೋವರ್‌ ಅವರು ದಿ ಕಪಿಲ್‌ ಶರ್ಮಾ ಶೋ ತೊರೆದಿದ್ದರು. ಜಗಳದ ಕುರಿತು ಸ್ಪಷ್ಟನೆ ನೀಡಿದ್ದ ಕಪಿಲ್‌ ಶರ್ಮಾ, “ನಾನು ಎಂದಿಗೂ ಸುನಿಲ್‌ ಗ್ರೋವರ್‌ ಜತೆ ಜಗಳ ಆಡಿಲ್ಲ, ಬೈದಿಲ್ಲ. ನಾನು ಅದ್ಭುತ ವ್ಯಕ್ತಿಗಳ ಜತೆ ಕೆಲಸ ಮಾಡಲು ಬಯಸುತ್ತೇನೆ. ಅವರಲ್ಲಿ ಸುನಿಲ್‌ ಗ್ರೋವರ್‌ ಕೂಡ ಒಬ್ಬರು” ಎಂದು ಹೇಳಿದ್ದರು.

ಕ್ಷಣ ಕ್ಷಣದ ಮಾಹಿತಿಗಾಗಿ Vistara News FaceBook ಪೇಜ್ ಫಾಲೋ ಮಾಡಿ
ಮಹತ್ವದ ಮಾಹಿತಿಗಾಗಿ ವಿಸ್ತಾರ ನ್ಯೂಸ್ ಆ್ಯಪ್ ಉಚಿತವಾಗಿ ಡೌನ್ ಲೋಡ್ ಮಾಡಿಕೊಳ್ಳಿ: Andriod App | IOS App

ಸ್ಯಾಂಡಲ್ ವುಡ್

Actor Diganth: ಕ್ರೇಜಿಸ್ಟಾರ್ ರವಿಚಂದ್ರನ್ ಸಿನಿಮಾದಲ್ಲಿ ದಿಗಂತ್‌ ಪಾತ್ರ ಡಿಫರೆಂಟ್!

Actor Diganth: ‘ಕ್ರೇಜಿಸ್ಟಾರ್’ ರವಿಚಂದ್ರನ್ ಮುಖ್ಯಪಾತ್ರದಲ್ಲಿ ನಟಿಸುತ್ತಿರುವ ‘ದಿ ಜಡ್ಜ್‌ಮೆಂಟ್’ ಚಿತ್ರದಲ್ಲಿ ದಿಗಂತ್‌ ಕಾಣಿಸಿಕೊಳ್ಳುತ್ತಿದ್ದಾರೆ. ಈಗಾಗಲೇ ಬಿಡುಗಡೆಯಾಗಿರುವ ʼದ ಜಡ್ಜ್‌ಮೆಂಟ್‌ʼ ಸಿನಿಮಾ ಪೋಸ್ಟರ್‌, ಫಸ್ಟ್‌ಲುಕ್‌ ಮತ್ತು ಟೀಸರ್‌ಗಳಲ್ಲಿ ನಟ ದಿಗಂತ್‌ ಪಾತ್ರ ಗಮನ ಸೆಳೆಯುತ್ತಿದ್ದು, ತಮ್ಮ ಹೊಸ ಸಿನಿಮಾ ಮತ್ತು ಹೊಸ ಪಾತ್ರದ ಬಗ್ಗೆ ದಿಗಂತ್‌ ಮಾತನಾಡಿದ್ದಾರೆ.

VISTARANEWS.COM


on

Actor Diganth role in Crazystar Ravichandran The Judgement movie Kannada
Koo

ಬೆಂಗಳೂರು: ಕನ್ನಡ ಚಿತ್ರರಂಗದಲ್ಲಿ ಇಲ್ಲಿಯವರೆಗೆ (Actor Diganth) ಲವ್‌, ರೊಮ್ಯಾನ್ಸ್‌ ಮತ್ತು ಕಾಮಿಡಿ ಶೈಲಿಯ ಸಿನಿಮಾಗಳಲ್ಲೇ ಹೆಚ್ಚಾಗಿ ಕಾಣಿಸಿಕೊಂಡಿದ್ದ ನಟ ದಿಗಂತ್‌, ಈ ಬಾರಿ ಲೀಗಲ್‌-ಥ್ರಿಲ್ಲರ್‌ ಶೈಲಿಯ ʼದ ಜಡ್ಜ್‌ಮೆಂಟ್‌ʼ ಸಿನಿಮಾದಲ್ಲಿ ಹೊಸಥರದ ಪಾತ್ರದ ಮೂಲಕ ಪ್ರೇಕ್ಷಕರ ಮುಂದೆ ಬರುತ್ತಿದ್ದಾರೆ. ಜಿ9 ಕಮ್ಯೂನಿಕೇಷನ್ ಮೀಡಿಯಾ & ಎಂಟರ್ಟೈನ್ಮೆಂಟ್ ಲಾಂಛನದಲ್ಲಿ ನಿರ್ಮಾಣವಾಗುತ್ತಿರುವ, ‘ಕ್ರೇಜಿಸ್ಟಾರ್’ ರವಿಚಂದ್ರನ್ ಮುಖ್ಯಪಾತ್ರದಲ್ಲಿ ನಟಿಸುತ್ತಿರುವ ‘ದಿ ಜಡ್ಜ್‌ಮೆಂಟ್’ ಚಿತ್ರದಲ್ಲಿ ದಿಗಂತ್‌ ಕಾಣಿಸಿಕೊಳ್ಳುತ್ತಿದ್ದಾರೆ. ಈಗಾಗಲೇ ಬಿಡುಗಡೆಯಾಗಿರುವ ʼದ ಜಡ್ಜ್‌ಮೆಂಟ್‌ʼ ಸಿನಿಮಾ ಪೋಸ್ಟರ್‌, ಫಸ್ಟ್‌ಲುಕ್‌ ಮತ್ತು (The Judgement movie Kannada) ಟೀಸರ್‌ಗಳಲ್ಲಿ ನಟ ದಿಗಂತ್‌ ಪಾತ್ರ ಗಮನ ಸೆಳೆಯುತ್ತಿದ್ದು, ತಮ್ಮ ಹೊಸ ಸಿನಿಮಾ ಮತ್ತು ಹೊಸ ಪಾತ್ರದ ಬಗ್ಗೆ ದಿಗಂತ್‌ ಮಾತನಾಡಿದ್ದಾರೆ. ಚಿತ್ರತಂಡ ನಡೆಸಿದ ಸಂದರ್ಶನದ ಝಲಕ್‌ ಇಲ್ಲಿದೆ.

ʼದ ಜಡ್ಜ್‌ಮೆಂಟ್‌ʼ ಸಿನಿಮಾದಲ್ಲಿ ನಿಮ್ಮ ಪಾತ್ರ ಹೇಗಿದೆ?

ನಾನು ಇಲ್ಲಿಯವರೆಗೆ ಮಾಡಿರುವ ಪಾತ್ರಗಳಿಗಿಂತ ವಿಭಿನ್ನವಾದ ಪಾತ್ರ ʼದ ಜಡ್ಜ್‌ಮೆಂಟ್‌ʼ ಸಿನಿಮಾದಲ್ಲಿದೆ. ಇಂದಿನ ಜನರೇಶನ್‌ನ ಬೆಂಗಳೂರಿನಂತಹ ಸಿಟಿಯಲ್ಲಿರುವ ಯುವಕರನ್ನು ಪ್ರತಿನಿಧಿಸುವಂತೆ ನನ್ನ ಪಾತ್ರವಿದೆ. ತನ್ನ ಇಷ್ಟದಂತೆ ಜೀವನ ನಡೆಸಲು ಹೊರಟ ಹುಡುಗನೊಬ್ಬನ ಜೀವನದಲ್ಲಿ ನಡೆಯುವ ಕೆಲವು ಅನಿರೀಕ್ಷಿತ ಘಟನೆಗಳು, ಏನೆಲ್ಲ ಬದಲಾವಣೆಗಳಿಗೆ ಕಾರಣವಾಗುತ್ತದೆ ಎಂಬುದರ ಸುತ್ತ ನನ್ನ ಪಾತ್ರವಿದೆ.

ಇದನ್ನೂ ಓದಿ: Actor Darshan: ಅಯ್ಯೋ ತಗಡೇ, ಯಾಕಪ್ಪ ಗುಮ್ಮಿಸ್ಕೋತಿಯಾ: ಉಮಾಪತಿಗೆ ದರ್ಶನ್‌ ವಾರ್ನಿಂಗ್‌!

ನಿಮ್ಮ ಪ್ರಕಾರ ʼದ ಜಡ್ಜ್‌ಮೆಂಟ್‌ʼ ಅಂದ್ರೇನು?

ನನ್ನ ಪ್ರಕಾರ, ʼದ ಜಡ್ಜ್‌ಮೆಂಟ್‌ʼ ಒಂದು ಕೋರ್ಟ್‌ ರೂಂ ಡ್ರಾಮಾ ಸಿನಿಮಾ. ಒಂದಷ್ಟು ನೈಜ ಘಟನೆಗಳನ್ನು ಆಧರಿಸಿ ಅದನ್ನು ಸಿನಿಮಾ ರೂಪದಲ್ಲಿ ತೆರೆಗೆ ತಂದಿದ್ದಾರೆ ನಿರ್ದೇಶಕ ಗುರುರಾಜ ಕುಲಕರ್ಣಿ (ನಾಡಗೌಡ). ಇಂದಿನ ಕಾನೂನು, ನ್ಯಾಯ ವ್ಯವಸ್ಥೆ ಎಲ್ಲದರ ಚಿತ್ರಣ ಈ ಸಿನಿಮಾದಲ್ಲಿದೆ. ಇದೊಂದು ಲೀಗಲ್‌-ಥ್ರಿಲ್ಲರ್‌ ಶೈಲಿಯ ಸಿನಿಮಾವಾಗಿರುವುದರಿಂದ, ಇದಕ್ಕಿಂತ ಹೆಚ್ಚಾಗಿ ಸಿನಿಮಾದ ಬಗ್ಗೆ ಏನೂ ಕುತೂಹಲ ಬಿಟ್ಟುಕೊಡಲಾರೆ.

ʼದ ಜಡ್ಜ್‌ಮೆಂಟ್‌ʼ ಸಿನಿಮಾ ಒಪ್ಪಿಕೊಳ್ಳಲು ಕಾರಣ?

ಮೊದಲೇ ಹೇಳಿದಂತೆ, ನಾನು ಇಲ್ಲಿಯವರೆ ಮಾಡಿದ ಸಿನಿಮಾಗಳಿಗಿಂತ ವಿಭಿನ್ನ ಕಥೆ, ಪಾತ್ರ ಎರಡೂ ಈ ಸಿನಿಮಾದಲ್ಲಿದೆ. ರವಿಚಂದ್ರನ್‌ ಅವರಂಥ ದೊಡ್ಡ ನಟರ ಜೊತೆ ಅಭಿನಯಿಸುವ ಅವಕಾಶ, ತುಂಬ ದೊಡ್ಡ ಸ್ಟಾರ್‌ ಕಾಸ್ಟಿಂಗ್‌, ತುಂಬ ವೃತ್ತಿಪರವಾಗಿರುವ ನಿರ್ದೇಶಕ ಗುರುರಾಜ್‌ ಕುಲಕರ್ಣಿ ಮತ್ತು ಸಿನಿಮಾದ ಬಗ್ಗೆ ತುಂಬ ಪ್ಯಾಶನೇಟ್‌ ಆಗಿರುವ ತಂಡ. ಇವೆಲ್ಲವೂ ಈ ಸಿನಿಮಾ ಒಪ್ಪಿಕೊಳ್ಳಲು ಕಾರಣವಾಯಿತು.

ರವಿಚಂದ್ರನ್‌ ಜೊತೆಗಿನ ಚಿತ್ರೀಕರಣದ ಅನುಭವ ಹೇಗಿತ್ತು?

ನಾನು ರವಿ ಸರ್‌ ಸಿನಿಮಾಗಳನ್ನು ನೋಡಿಕೊಂಡು ಬೆಳೆದವನು. ಮೊದಲ ಬಾರಿಗೆ ʼದ ಜಡ್ಜ್‌ಮೆಂಟ್‌ʼ ಸಿನಿಮಾದಲ್ಲಿ ಅವರೊಂದಿಗೆ ಅಭಿನಯಿಸುವ ಅವಕಾಶ ಸಿಕ್ಕಿದ್ದಕ್ಕೆ ತುಂಬ ಖುಷಿಯಾಗಿದೆ. ರವಿ ಸರ್‌ ಜೊತೆಗೆ ಶೂಟಿಂಗ್‌ ಮಾಡುವಾಗ, ಸಮಯ ಹೋಗುವುದೇ ಗೊತ್ತಾಗುವುದಿಲ್ಲ. ಅವರಿಂದ ಕಲಿತುಕೊಳ್ಳುವುದು, ಮಾತಿಗೆ ಕುಳಿತುಕೊಂಡರೆ ಅವರಿಂದ ತಿಳಿದುಕೊಳ್ಳುವುದು ಸಾಕಷ್ಟು ವಿಷಯಗಳು ಇರುತ್ತದೆ.

ಶೂಟಿಂಗ್‌ನಲ್ಲಿ ರವಿಚಂದ್ರನ್‌ ಅವರಿಂದ ಕಲಿತುಕೊಂಡಿದ್ದೇನಾದರೂ ಇದೆಯಾ?

ನಾವೆಲ್ಲ ಸಿನಿಮಾವನ್ನು ಆಡಿಯನ್ಸ್‌ ಆಗಿ ಅಥವಾ ಕಲಾವಿದರಾಗಿ ನೋಡಿದರೆ, ರವಿ ಸರ್‌ ಸಿನಿಮಾವನ್ನು ಬೇರೆಯದ್ದೇ ದೃಷ್ಟಿಕೋನದಲ್ಲಿ ನೋಡುತ್ತಾರೆ. ಅವರು ಆಡಿಯನ್‌, ಆರ್ಟಿಸ್ಟ್‌, ಟೆಕ್ನೀಶಿಯನ್‌, ಮೇಕರ್‌ ಎಲ್ಲವೂ ಆಗಿರುವುದರಿಂದ, ಸಿನಿಮಾವನ್ನು ಅವರು ನೋಡುವ ದೃಷ್ಟಿಯೇ ಬೇರೆಯಾಗಿರುತ್ತದೆ. ಸಿನಿಮಾ ವಿಷಯದಲ್ಲಿ ಅವರ ಜ್ಞಾನ ತುಂಬ ಅಪಾರ. ಸಿನಿಮಾ ಮೇಕಿಂಗ್‌ ಬಗ್ಗೆ ಅವರು ಹೇಳುವ ವಿಷಯಗಳು ಬೇರೆಲ್ಲೂ ಕಲಿತುಕೊಳ್ಳಲು ಸಿಗದಂತವು.

ಇದನ್ನೂ ಓದಿ: Dolly Dhananjay: ʻಕೋಟಿʼ ಸಿನಿಮಾ ಮೊದಲ ಹಾಡು ಬಿಡುಗಡೆ!

ಸಿನಿಮಾದಲ್ಲಿ ನಿಮ್ಮ ಪಾತ್ರಕ್ಕೆ ತಯಾರಿ ಹೇಗಿತ್ತು?

ಸಾಮಾನ್ಯವಾಗಿ ಪ್ರತಿ ಸಿನಿಮಾದ ಪಾತ್ರಗಳಿಗೂ ಅದರದ್ದೇ ಆದ ಒಂದಷ್ಟು ತಯಾರಿ ಇದ್ದೇ ಇರುತ್ತದೆ. ಆದರೆ ನಿಜ ಹೇಳಬೇಕೆಂದರೆ, ಈ ಸಿನಿಮಾಕ್ಕೆ ಅಷ್ಟೊಂದು ತಯಾರಿ ಮಾಡಿಕೊಂಡಿರಲಿಲ್ಲ. ಅದಕ್ಕೆ ಕಾರಣ ನಿರ್ದೇಶಕ ಗುರುರಾಜ್‌. ಈ ಸಿನಿಮಾದ ಪ್ರತಿ ಪಾತ್ರಗಳು, ಸನ್ನಿವೇಶಗಳು ಹೇಗೆ ಬರಬೇಕು ಎಂಬುದರ ಬಗ್ಗೆ ಅವರಿಗೆ ಸ್ಪಷ್ಟತೆಯಿತ್ತು. ಪ್ರತಿಯೊಂದನ್ನೂ ಕಲಾವಿದರಿಗೆ ಅರ್ಥೈಸಿ ಅವರಿಂದ ಅಭಿನಯ ತೆಗೆಸುತ್ತಿದ್ದರು. ಅದನ್ನು ಬಿಟ್ಟರೆ ಸಿನಿಮಾದಲ್ಲಿ ಬರುವ ಡ್ಯಾನ್ಸ್‌ ನಂಬರ್‌ಗೆ ಒಂದಷ್ಟು ತಯಾರಿ ಮಾಡಿಕೊಳ್ಳಬೇಕಾಯಿತು.

ಸಿನಿಮಾದಲ್ಲಿ ನಿಮ್ಮ ಮತ್ತು ಧನ್ಯಾ ಕೆಮಿಸ್ಟ್ರಿ ಹೇಗಿದೆ?

ʼದ ಜಡ್ಜ್‌ಮೆಂಟ್‌ʼ ಸಿನಿಮಾದಲ್ಲಿ ಮೊದಲ ಬಾರಿಗೆ ನಾನು ಧನ್ಯಾ ರಾಮಕುಮಾರ್‌ ಜೋಡಿಯಾಗಿ ಅಭಿನಯಿಸಿದ್ದೇವೆ. ನಮ್ಮಿಬ್ಬರದ್ದೂ, ಇಂದಿನ ಜನರೇಶನ್‌ ಯುವ ಜೋಡಿಯನ್ನು ಪ್ರತಿನಿಧಿಸುವಂಥ ಪಾತ್ರ. ಇಬ್ಬರ ಕೆಮಿಸ್ಟ್ರಿ ತುಂ ಬ ಚೆನ್ನಾಗಿದೆ. ಕಲಾವಿದೆಯಾಗಿ ಬೆಳೆಯಬೇಕೆಂಬ ಧನ್ಯಾ ಅವರ ಉದ್ದೇಶ, ಅವರ ಉತ್ಸಾಹ ಎರಡೂ ಮೆಚ್ಚುವಂಥದ್ದು. ʼದ ಜಡ್ಜ್‌ಮೆಂಟ್‌ʼ ಸಿನಿಮಾದ ನಂತರ ʼಪೌಡರ್‌ʼ ಸಿನಿಮಾದಲ್ಲೂ ನಾವಿಬ್ಬರೂ ಒಟ್ಟಿಗೇ ಅಭಿನಯಿಸುತ್ತಿದ್ದೇವೆ.

ನಿರ್ದೇಶಕರು ಮತ್ತು ಚಿತ್ರತಂಡದ ಬಗ್ಗೆ ಏನು ಹೇಳುವಿರಿ?

ʼದ ಜಡ್ಜ್‌ಮೆಂಟ್‌ʼ ಸಿನಿಮಾದ ನಿರ್ದೇಶಕ ಗುರುರಾಜ್‌ ಮೂಲತಃ ಸಾಫ್ಟ್‌ವೇರ್‌ ಹಿನ್ನೆಲೆಯಿಂದ ಸಿನಿಮಾಕ್ಕೆ ಬಂದವರು. ಸಾಕಷ್ಟು ವಿಷಯಗಳ ಬಗ್ಗೆ ಅವರಿಗೆ ಆಳವಾದ ಜ್ಞಾನವಿದೆ. . ಬಿಗ್‌ ಕಾಸ್ಟಿಂಗ್‌, ಬಿಗ್‌ ಬಜೆಟ್‌ ಇಟ್ಟುಕೊಂಡು ಅಂದುಕೊಂಡಂತೆ, ಪ್ಲಾನ್‌ ಪ್ರಕಾರ ಇಡೀ ಸಿನಿಮಾವನ್ನು ನಿರ್ದೇಶಕರು ಮತ್ತು ಚಿತ್ರತಂಡ ಅಚ್ಚುಕಟ್ಟಾಗಿ ತೆರೆಮೇಲೆ ತರುತ್ತಿದೆ. ತುಂಬ ಪ್ಯಾಶನೇಟ್‌ ಆಗಿ ಎಲ್ಲರೂ ಸೇರಿ ಒಂದೊಳ್ಳೆ ಸಿನಿಮಾ ಮಾಡಿದ್ದೇವೆ.

ʼದ ಜಡ್ಜ್‌ಮೆಂಟ್‌ʼ ಮೇಲೆ ನಿಮ್ಮ ನಿರೀಕ್ಷೆ ಹೇಗಿದೆ?

ನನ್ನ ಪ್ರಕಾರ, ʼದ ಜಡ್ಜ್‌ಮೆಂಟ್‌ʼ ಮಾಮೂಲಿ ಎಂಟರ್‌ಟೈನ್ಮೆಂಟ್‌ ಸಿನಿಮಾಗಳ ಸಾಲಿಗೆ ಅಥವಾ ಯಾವುದೋ ಒಂದು ವರ್ಗಕ್ಕೆ ಸೇರುವ ಸಿನಿಮಾವಲ್ಲ. ಕನ್ನಡದ ಮಟ್ಟಿಗೆ ತುಂಬ ಅಪರೂಪವಾಗಿರುವ ಲೀಗಲ್‌-ಥ್ರಿಲ್ಲರ್‌ ಶೈಲಿಯಲ್ಲಿ ಸಿನಿಮಾ ಬಂದಿದೆ. ಇದರಲ್ಲೊಂದು ಒಳ್ಳೆಯ ವಿಷಯವಿದೆ. ಅದನ್ನು ಮನಮುಟ್ಟುವಂತೆ ನಿರ್ದೇಶಕರು ತೆರೆಮೇಲೆ ಹೇಳಿದ್ದಾರೆ. ಆಡಿಯನ್ಸ್‌ಗೆ ಖಂಡಿತವಾಗಿಯೂ ʼದ ಜಡ್ಜ್‌ಮೆಂಟ್‌ʼ ಒಂದು ಒಳ್ಳೆಯ ಅನುಭವ ಕೊಟ್ಟು, ಇಷ್ಟವಾಗಲಿದೆ ಎಂಬ ವಿಶ್ವಾಸವಿದೆ.

ಪ್ರಚಾರದ ವೇಳೆ ಪ್ರೇಕ್ಷಕರ ಕಡೆಯಿಂದ ಹೇಗೆ ರೆಸ್ಪಾನ್ಸ್‌ ಸಿಗುತ್ತಿದೆ?

ಈಗಾಗಲೇ ʼದ ಜಡ್ಜ್‌ಮೆಂಟ್‌ʼ ಸಿನಿಮಾದ ಟೈಟಲ್‌ ಪೋಸ್ಟರ್‌, ಕ್ಯಾರೆಕ್ಟರ್‌ ಫಸ್ಟ್‌ಲುಕ್‌, ಟೀಸರ್‌ ಮಾತ್ತು ಹಾಡು ಬಿಡುಗಡೆಯಾಗಿದೆ. ಎಲ್ಲದಕ್ಕೂ ಸೋಶಿಯಲ್‌ ಮೀಡಿಯಾಗಳಲ್ಲಿ ಆಡಿಯನ್ಸ್‌ ಕಡೆಯಿಂದ ಒಳ್ಳೆಯ ರೆಸ್ಪಾನ್ಸ್‌ ಸಿಗುತ್ತಿದೆ. ಬಹುತೇಕರು ಸಿನಿಮಾದ ಬಗ್ಗೆ ಸಾಕಷ್ಟು ನಿರೀಕ್ಷೆಯ ಮಾತುಗಳನ್ನಾಡುತ್ತಿದ್ದಾರೆ.

ವಿ ರವಿಚಂದ್ರನ್, ದಿಗಂತ್, ಲಕ್ಷ್ಮೀ ಗೋಪಾಲಸ್ವಾಮಿ, ರಂಗಾಯಣ ರಘು, ಬಾಲಾಜಿ ಮನೋಹರ್, ಸುಜಯ್ ಶಾಸ್ತ್ರಿ, ಜಗದೀಶ್ ಮಲ್ನಾಡ್, ರವಿಶಂಕರ್ ಗೌಡ, ರೇಖಾ ಕೂಡ್ಲಿಗಿ, ಕೃಷ್ಣ ಹೆಬ್ಬಾಳೆ, ಅರವಿಂದ್ ಕುಪ್ಳೀಕರ್ ಮುಂತಾದ ನುರಿತ ಕಲಾವಿದರು ಸಿನಿಮಾದಲ್ಲಿದ್ದಾರೆ.

ಅನೂಪ್ ಸೀಳಿನ್ ಸಂಗೀತ ನಿರ್ದೇಶನ, ಕೆಂಪರಾಜು ಬಿ ಎಸ್ ಸಂಕಲನ‌, ಪ್ರಮೋದ್ ಮರವಂತೆ ಈ ಚಿತ್ರದ ಹಾಡುಗಳನ್ನು ರಚಿಸಿದ್ದಾರೆ. ಎಂ ಎಸ್ ರಮೇಶ್ ಸಂಭಾಷಣೆ ಬರೆದಿದ್ದಾರೆ. ಡಾ. ರವಿ ವರ್ಮ ಸಾಹಸ ನಿರ್ದೇಶನ, ರೂಪೇಂದ್ರ ಆಚಾರ್ ಅವರ ಕಲಾ ನಿರ್ದೇಶನ ‘ದ ಜಡ್ಜ್ ಮೆಂಟ್’ ಚಿತ್ರಕ್ಕಿದೆ.

Continue Reading

ಸ್ಯಾಂಡಲ್ ವುಡ್

Dolly Dhananjay: ʻಕೋಟಿʼ ಸಿನಿಮಾ ಮೊದಲ ಹಾಡು ಬಿಡುಗಡೆ!

Dolly Dhananjay: `ಕೋಟಿ `ಚಿತ್ರದ ತಾರಾಗಣದಲ್ಲಿ ಡಾಲಿ ಧನಂಜಯ ಜೊತೆ ನಾಯಕಿಯಾಗಿ ಮೋಕ್ಷಾ ಕುಶಾಲ್‌ ಇದ್ದಾರೆ. ಉಳಿದಂತೆ ಹಿರಿಯ ನಟರಾದ ರಂಗಾಯಣ ರಘು, ರಮೇಶ್‌ ಇಂದಿರಾ, ತಾರಾ, ಸರ್ದಾರ್‌ ಸತ್ಯ ಮುಂತಾದವರು ಅಭಿನಯಿಸಿದ್ದಾರೆ. ಈ ಸಿನೆಮಾವನ್ನು ಜಿಯೋ ಸ್ಟುಡಿಯೋಸ್ ನಿರ್ಮಾಣ ಮಾಡಿದ್ದು, ಕಲರ್ಸ್ ಕನ್ನಡವನ್ನು ದಶಕಗಳ ಕಾಲ ಮುನ್ನಡೆಸಿದ್ದ ಪರಮ್‌ ಅವರು ಬರೆದು ನಿರ್ದೇಶಿಸಿದ್ದಾರೆ. ʼಕೋಟಿʼ ಜೂನ್‌ 14ರಂದು ಚಿತ್ರಮಂದಿರಗಳಲ್ಲಿ ಬಿಡುಗಡೆಯಾಗಲಿದೆ.

VISTARANEWS.COM


on

Dolly Dhananjay Kotie Cinema Kannada
Koo

ಬೆಂಗಳೂರು: ಡಾಲಿ ಧನಂಜಯ್ (Dolly Dhananjay) ಅಭಿನಯದ ʻಕೋಟಿʼ ಸಿನಿಮಾದ ಮೊದಲ ಹಾಡು ‘ಮಾತು ಸೋತು’ ಈಗ ಬಿಡುಗಡೆಯಾಗಿದೆ. ಈ ಹಾಡನ್ನು ವಾಸುಕಿ ವೈಭವ್ ಸಂಯೋಜಿಸಿದ್ದು, ಯೋಗರಾಜ್ ಭಟ್ ಸಾಹಿತ್ಯ ರಚಿಸಿ, ಅರ್ಮಾನ್ ಮಲಿಕ್ ಹಾಡಿದ್ದಾರೆ. ʻಕೋಟಿʼ ಸಿನಿಮಾದ ಹಾಡುಗಳ ಹಕ್ಕನ್ನು ʻಸರಿಗಮʼ ಖರೀದಿಸಿದ್ದು ಈ ಹಾಡಿನ ಲಿರಿಕಲ್ ವಿಡಿಯೋವನ್ನು ಸರಿಗಮ ಕನ್ನಡ ಯೂಟ್ಯೂಬ್ ಚಾನೆಲ್ಲಿನಲ್ಲಿ‌ ವೀಕ್ಷಿಸಬಹುದು.

ಹಾಡಿನ ಸಂಯೋಜಕರಾದ ವಾಸುಕಿ ವೈಭವ್ “ಇದು ನನ್ನ ಮತ್ತು ಅರ್ಮಾನ್ ಮಲಿಕ್ ಕಾಂಬಿನೇಷನ್ನಿನ ಮೊದಲ ಹಾಡು. ಸಾಹಿತ್ಯ ಯೋಗರಾಜ್ ಭಟ್ ಅವರದ್ದು. ಅವರ ಜತೆ ಕೆಲಸ ಮಾಡುವುದು ಯಾವಾಗಲೂ ಖುಷಿ ಮತ್ತು ಕಲಿಕೆಯ ವಿಚಾರ. ಜನರಿಗೆ ಖಂಡಿತ ಈ ಹಾಡು ಇಷ್ಟವಾಗತ್ತೆ‌ ಅನ್ನೊ ನಂಬಿಕೆ ಇದೆ” ಎಂದು ಹೇಳಿದರು.

“ವಾಸುಕಿ ಹೊಸ ತಲೆಮಾರಿನ ಪ್ರತಿಭಾವಂತ ಸಂಗೀತ ನಿರ್ದೇಶಕ. ಯೋಗರಾಜ್ ಭಟ್ ಅವರ ಸಾಹಿತ್ಯದ ದೊಡ್ಡ ಅಭಿಮಾನಿ ನಾನು. ಈ ಇಬ್ಬರ ಕಾಂಬಿನೇಷನ್ನಿನ ಈ ಹಾಡನ್ನು ಅರ್ಮಾನ್ ಮಲಿಕ್ ತುಂಬಾ ಚೆನ್ನಾಗಿ ಹಾಡಿದ್ದಾರೆ. ಈ ಹಾಡು ಕನ್ನಡದ ಕಿವಿ ಮತ್ತು ಮನಸುಗಳಿಗೆ ಇಷ್ಟವಾಗುವುದರಲ್ಲಿ ಯಾವುದೇ ಅನುಮಾನವಿಲ್ಲ” ಎಂದು ಕೋಟಿಯ ನಿರ್ದೇಶಕ ‘ಪರಮ್’ ಅಭಿಪ್ರಾಯ ಪಟ್ಟರು.

`ಕೋಟಿ `ಚಿತ್ರದ ತಾರಾಗಣದಲ್ಲಿ ಡಾಲಿ ಧನಂಜಯ ಜೊತೆ ನಾಯಕಿಯಾಗಿ ಮೋಕ್ಷಾ ಕುಶಾಲ್‌ ಇದ್ದಾರೆ. ಉಳಿದಂತೆ ಹಿರಿಯ ನಟರಾದ ರಂಗಾಯಣ ರಘು, ರಮೇಶ್‌ ಇಂದಿರಾ, ತಾರಾ, ಸರ್ದಾರ್‌ ಸತ್ಯ ಮುಂತಾದವರು ಅಭಿನಯಿಸಿದ್ದಾರೆ.

ಇದನ್ನೂ ಓದಿ: Crowd Funding: ಕಂದಮ್ಮನ ಚಿಕಿತ್ಸೆಗೆ ಹರಿದು ಬಂದ ನೆರವು; 3 ತಿಂಗಳಲ್ಲಿ 9 ಕೋಟಿ ರೂ. ಸಂಗ್ರಹ

ಚಿತ್ರದಲ್ಲಿ ಐದು ಹಾಡುಗಳಿದ್ದು ವಾಸುಕಿ ವೈಭವ್‌ ರಾಗ ಸಂಯೋಜಿಸಿದ್ದಾರೆ. ಈ ಹಾಡುಗಳಿಗೆ ಯೋಗರಾಜ್‌ ಭಟ್‌ ಮತ್ತು ವಾಸುಕಿ ವೈಭವ್‌ ಸಾಹಿತ್ಯ ರಚಿಸಿದ್ದಾರೆ. ಹಿನ್ನೆಲೆ ಸಂಗೀತದ ಜವಾಬ್ದಾರಿಯನ್ನು ಚಾರ್ಲಿ 777 ಖ್ಯಾತಿಯ ನೊಬಿನ್‌ ಪೌಲ್‌ ಹೊತ್ತಿದ್ದಾರೆ. ಕಾಂತಾರ ಸಿನಿಮಾದ ಕೆಲಸಕ್ಕೆ ಪ್ರಶಂಸೆಗಳಿಸಿದ್ದ ಪ್ರತೀಕ್‌ ಶೆಟ್ಟಿಯವರು‌ ಕೋಟಿಯ ಸಂಕಲನಕಾರರಾದರೆ, ಟೆಲಿವಿಷನ್‌ನ ಖ್ಯಾತ ಛಾಯಾಗ್ರಾಹಕ ಅರುಣ್ ಅವರು ಈ ಸಿನಿಮಾದ ಕ್ಯಾಮೆರಮನ್.

ಈ ಸಿನೆಮಾವನ್ನು ಜಿಯೋ ಸ್ಟುಡಿಯೋಸ್ ನಿರ್ಮಾಣ ಮಾಡಿದ್ದು, ಕಲರ್ಸ್ ಕನ್ನಡವನ್ನು ದಶಕಗಳ ಕಾಲ ಮುನ್ನಡೆಸಿದ್ದ ಪರಮ್‌ ಅವರು ಬರೆದು ನಿರ್ದೇಶಿಸಿದ್ದಾರೆ. ʼಕೋಟಿʼ ಜೂನ್‌ 14ರಂದು ಚಿತ್ರಮಂದಿರಗಳಲ್ಲಿ ಬಿಡುಗಡೆಯಾಗಲಿದೆ.

Continue Reading

ಕರ್ನಾಟಕ

Chaya Singh: ನಟಿ ಛಾಯಾ ಸಿಂಗ್ ಮನೆಯಲ್ಲಿ ಕಳ್ಳತನ; ಚಿನ್ನಾಭರಣ ಕದ್ದಿದ್ದ ಮನೆಕೆಲಸದಾಕೆ ಬಂಧನ

Chaya Singh: ನಟಿ ಛಾಯಾ ಸಿಂಗ್‌ ಅವರ ತಾಯಿ ಮನೆಯಲ್ಲಿ 66 ಗ್ರಾಂ ಚಿನ್ನಾಭರಣ, 150 ಗ್ರಾಂ ಬೆಳ್ಳಿ ಆಭರಣ ಸೇರಿ ಲಕ್ಷಾಂತರ ರೂ. ಮೌಲ್ಯದ ವಸ್ತುಗಳು ಕಳವಾಗಿದ್ದವು. ಈ ಸಂಬಂಧ ಮನೆಕೆಲಸದಾಕೆಯನ್ನು ಪೊಲೀಸರು ಬಂಧಿಸಿದ್ದಾರೆ.

VISTARANEWS.COM


on

Chaya Singh
Koo

ಬೆಂಗಳೂರು: ಕನ್ನಡದ ‘ಅಮೃತಧಾರೆ’ ಧಾರಾವಾಹಿಯ ನಟಿ ಛಾಯಾ ಸಿಂಗ್ (Chaya Singh) ಅವರ ತಾಯಿ ಮನೆಯಲ್ಲಿ ಕಳ್ಳತನ ಮಾಡಿದ್ದ ಮನೆಕೆಲಸದಾಕೆ ಪೊಲೀಸರಿಗೆ ಸಿಕ್ಕಿಬಿದ್ದಿದ್ದಾಳೆ. ಛಾಯಾಸಿಂಗ್ ಅವರ ತಾಯಿ ಚಮನಲತಾ ಅವರ ಬಸವೇಶ್ವರನಗರದ ನಿವಾಸದಲ್ಲಿ ಕಳ್ಳತನ ನಡೆದಿತ್ತು. 66 ಗ್ರಾಂ ಚಿನ್ನಾಭರಣ, 150 ಗ್ರಾಂ ಬೆಳ್ಳಿ ಆಭರಣ ಸೇರಿದಂತೆ ಲಕ್ಷಾಂತರ ರೂ. ಮೌಲ್ಯದ ವಸ್ತುಗಳು ಕಳವಾಗಿದ್ದವು. ಇದೀಗ ಮನೆಯಲ್ಲಿ ಕಳ್ಳತನ ಮಾಡಿರುವುದು ಮನೆಕೆಲಸದಾಕೆ ಎಂಬುವುದು ತಿಳಿದುಬಂದಿದ್ದು, ಆಕೆಯನ್ನು ಪೊಲೀಸರು ಬಂಧಿಸಿದ್ದಾರೆ.

ನಟಿಯ ತಾಯಿ ಮನೆಯಲ್ಲಿ ಚಿನ್ನಾಭರಣ ಕಳವಾಗಿದ್ದ ಬಗ್ಗೆ ಬಸವೇಶ್ವರ ನಗರ ಪೊಲೀಸ್ ಠಾಣೆಯಲ್ಲಿ ಪ್ರಕರಣ ದಾಖಲಾಗಿತ್ತು. ತನಿಖೆಯ ವೇಳೆ ಕೆಲಸದಾಕೆ ಉಷಾ ಈ ಕೃತ್ಯ ಮಾಡಿರುವುದು ಬೆಳಕಿಗೆ ಬಂದಿದ್ದು, ಅವರನ್ನು ಬಂಧಿಸಿ ಆಭರಣಗಳನ್ನು ಪೊಲೀಸರು ವಶಕ್ಕೆ ಪಡೆದಿದ್ದಾರೆ. ಕೆಲಸದ ವೇಳೆ, ಚಿನ್ನಾಭರಣ ದೋಚಿ ಏನೂ ಅರಿಯದಂತೆ ಕೆಲಸದಾಕೆ ವರ್ತಿಸಿದ್ದಳು. ಇದೀಗ ಆಕೆಯ ಕಳ್ಳತನ ಮಾಡಿರುವುದು ಪೊಲೀಸರ ತನಿಖೆಯಿಂದ ಬಯಲಾಗಿದೆ.

ಇದನ್ನೂ ಓದಿ | Actor Dhanush: ಧನುಷ್‌ಗೆ ಐಶ್ವರ್ಯಾ ದೋಖಾ; ಐಶ್ವರ್ಯಾಗೆ ಧನುಷ್‌ ಮೋಸ! ಖ್ಯಾತ ಗಾಯಕಿಯಿಂದ ಸೆನ್ಷೆಷನಲ್‌ ಮಾಹಿತಿ

ಛಾಯಾ ಸಿಂಗ್ ಕುಟುಂಬ ಹಲವು ವರ್ಷಗಳಿಂದ ಬೆಂಗಳೂರಿನಲ್ಲಿ ನೆಲೆಸಿದೆ. ಛಾಯಾ ಸಿಂಗ್ ಪ್ರಸ್ತುತ ಕನ್ನಡದ ‘ಅಮೃತಧಾರೆ’ ಧಾರಾವಾಹಿಯಲ್ಲಿ ನಾಯಕಿ ಭೂಮಿಕಾ ಪಾತ್ರಧಾರಿಯಾಗಿ ನಟಿಸುತ್ತಿದ್ದಾರೆ. ಇನ್ನು ಶಿವರಾಜ್‌ಕುಮಾರ್ ನಟನೆಯ ‘ಭೈರತಿ ರಣಗಲ್ ಸಿನಿಮಾದಲ್ಲಿ ಛಾಯಾ ಸಿಂಗ್ ಅಭಿನಯಿಸಿದ್ದು, ಈ ವರ್ಷಾಂತ್ಯದಲ್ಲಿ ಸಿನಿಮಾ ತೆರೆ ಕಾಣಲಿದೆ.

ನಟಿ ವೈಷ್ಣವಿ ಗೌಡಗೆ ನೋಟಿಸ್‌ ಕೊಟ್ಟ ಟ್ರಾಫಿಕ್‌ ಪೊಲೀಸರು; ಸೀತಮ್ಮ ಮಾಡಿದ ತಪ್ಪೇನು?

Vaishnavi Gowda
Vaishnavi Gowda

ಬೆಂಗಳೂರು: ಕಿರುತೆರೆಯ ಜನಪ್ರಿಯ ನಟಿ ವೈಷ್ಣವಿ ಗೌಡ (Vaishnavi Gowda) ಅವರಿಗೆ ಬೆಂಗಳೂರು ಟ್ರಾಫಿಕ್‌ ಪೊಲೀಸರು ದಂಡದ ಬಿಸಿ ಮುಟ್ಟಿಸಿದ್ದಾರೆ. ಧಾರಾವಾಹಿಯ ದೃಶ್ಯವೊಂದರಲ್ಲಿ ಹೆಲ್ಮೆಟ್‌ ಧರಿಸದೆ ಸ್ಕೂಟರ್‌ನಲ್ಲಿ ಸಂಚರಿಸಿದ ಕಾರಣಕ್ಕೆ ಪೊಲೀಸರು 500 ರೂ. ದಂಡ ವಿಧಿಸಿದ್ದಾರೆ ಎನ್ನಲಾಗಿದ್ದು, ಸದ್ಯ ಈ ವಿಚಾರ ಸೋಷಿಯಲ್‌ ಮೀಡಿಯಾದಲ್ಲಿ ಚರ್ಚೆಯಾಗುತ್ತಿದೆ.

ಸದ್ಯ ಝೀ ಕನ್ನಡ ವಾಹಿನಲ್ಲಿ ಪ್ರಸಾರವಾಗುತ್ತಿರುವ ಜನಪ್ರಿಯ ʼಸೀತಾ ರಾಮʼ ಧಾರಾವಾಹಿಯಲ್ಲಿ ವೈಷ್ಣವಿ ಗೌಡ ನಾಯಕಿ ಸೀತಾ ಪಾತ್ರದಲ್ಲಿ ಕಾಣಿಸಿಕೊಂಡಿದ್ದಾರೆ. 2023ರ ಜುಲೈ 17ರಂದು ಆರಂಭವಾದ ಈ ಧಾರಾವಾಹಿ ವೀಕ್ಷಕರ ಗಮನ ಸೆಳೆಯುತ್ತಿದೆ. ಆರಂಭವಾಗಿ ಸುಮಾರು 10 ತಿಂಗಳು ಕಳೆದಿದ್ದರೂ ಈಗಲೂ ಟಾಪ್‌ ಲಿಸ್ಟ್‌ನಲ್ಲಿದೆ. ಉತ್ತಮ ಟಿಆರ್‌ಪಿ ಪಡೆದುಕೊಳ್ಳುತ್ತಿರುವ ಈ ಧಾರಾವಾಹಿಯ ದೃಶ್ಯವೇ ಸದ್ಯ ವೈಷ್ಣವಿ ಗೌಡ ಅವರಿಗೆ ಫಜೀತಿ ತಂದಿಟ್ಟಿದೆ.

ಏನಿದು ಪ್ರಕರಣ?

ʼಸೀತಾ ರಾಮʼ ಧಾರಾವಾಹಿಯ 14ನೇ ಸಂಚಿಕೆಯ ದೃಶ್ಯ ಸದ್ಯ ಪ್ರಕರಣದ ಕೇಂದ್ರ ಬಿಂದು. ಇದರಲ್ಲಿ ಸೀತಾ (ವೈಷ್ಣವಿ ಗೌಡ) ಹಾಗೂ ಆಕೆಯ ಗೆಳೆತಿ ಪ್ರಿಯಾ (ಶ್ವೇತಾ ಶಂಕರಪ್ಪ) ಸ್ಕೂಟರ್‌ನಲ್ಲಿ ತೆರಳುವ ದೃಶ್ಯವಿದೆ. ಸ್ಕೂಟರ್‌ ಓಡಿಸುತ್ತಿದ್ದ ಶ್ವೇತಾ ಹೆಲ್ಮೆಟ್ ಧರಿಸಿದ್ದರೆ ಹಿಂದಿನ ಸೀಟಿನಲ್ಲಿದ್ದ ವೈಷ್ಣವಿ ಹೆಲ್ಮೆಟ್ ಧರಿಸಿರಲಿಲ್ಲ. ಇದನ್ನು ಉಲ್ಲೇಖಿಸಿ ಮಂಗಳೂರಿನ ಜಯಪ್ರಕಾಶ್‌ ಎಕ್ಕೂರು ಎನ್ನುವವರು ಮಂಗಳೂರು ನಗರ ಪೊಲೀಸ್‌ ಆಯುಕ್ತರಿಗೆ ದೂರು ನೀಡಿದ್ದರು. ವೈಷ್ಣವಿ ಗೌಡ ಟ್ರಾಫಿಕ್‌ ರೂಲ್ಸ್‌ ಉಲ್ಲಂಘಿಸಿದ್ದಾರೆ ಎಂದು ತಿಳಿಸಿದ್ದರು.

ಪ್ರಕರಣವನ್ನು ಗಂಭೀರವಾಗಿ ಪರಿಣಿಸಿದ ಪೊಲೀಸರಿಗೆ ಬಳಿಕ ಧಾರಾವಾಹಿಯ ಶೂಟಿಂಗ್ ಬೆಂಗಳೂರಿನ ನಂದಿನಿ ಲೇಔಟ್​ನಲ್ಲಿ ನಡೆದ ವಿಚಾರ ಗೊತ್ತಾಗಿತ್ತು. ಬಳಿಕ ಇದನ್ನು ಬೆಂಗಳೂರಿನ ರಾಜಾಜಿನಗರ ಠಾಣೆಗೆ ವರ್ಗಾಯಿಸಲಾಯಿತು. ಸದ್ಯ ಸ್ಕೂಟರ್‌ ಮಾಲೀಕರಾದ ಸವಿತಾ ಹಾಗೂ ವೈಷ್ಣವಿ ಅವರಿಗೆ ತಲಾ 500 ರೂ. ದಂಡ ವಿಧಿಸಲಾಗಿದೆ ಎಂದು ವರದಿಯೊಂದು ತಿಳಿಸಿದೆ.

ಹಿಂದಿಗೆ ರಿಮೇಕ್‌

ಸದ್ಯ ʼಸೀತಾ ರಾಮʼ ಧಾರಾವಾಹಿ ಹಿಂದಿಗೆ ರಿಮೇಕ್‌ ಆಗುತ್ತಿದೆ. ಹಿಂದಿ ರಿಮೇಕ್‌ಗೆ ‘ಮೇ ಹೂ ಸಾತ್ ತೆರೆ’ ಎನ್ನುವ ಶೀರ್ಷಿಕೆ ಇಡಲಾಗಿದೆ. ಇದು ಝೀ ಹಿಂದಿ ವಾಹಿನಿಯಲ್ಲಿ ಪ್ರಸಾರವಾಗಲಿದೆ. ಕನ್ನಡದಲ್ಲಿ ವೈಷ್ಣವಿ ಗೌಡ ಜತೆಗೆ ರಾಮ್‌ ಆಗಿ ಗಗನ್ ಚಿನ್ನಪ್ಪ ನಟಿಸುತ್ತಿದ್ದಾರೆ. ಧಾರಾವಾಹಿಯ ಪ್ರಧಾನ ಆಕರ್ಷಣೆಯಾದ ಸಿಹಿ ಪಾತ್ರದಲ್ಲಿ ಪುಟಾಣಿ ರೀತು ಸಿಂಗ್ ಮೋಡಿ ಮಾಡಿದ್ದಾರೆ. ಇವರ ಜತೆಗೆ ಪೂಜಾ ಲೋಕೇಶ್, ಅಶೋಕ್, ಮುಖ್ಯಮಂತ್ರಿ ಚಂದ್ರು ಮೊದಲಾದವರು ಈ ಧಾರಾವಾಹಿಯ ಪ್ರಮುಖ ಪಾತ್ರ ನಿರ್ವಹಿಸುತ್ತಿದ್ದಾರೆ. ಹಿಂದಿಯಲ್ಲಿ ಗಗನ್ ಚಿನ್ನಪ್ಪ ಮಾಡಿರುವ ರಾಮ್‌ ಪಾತ್ರವನ್ನು ಕರಣ್ ವೋಹ್ರಾ ನಿರ್ವಹಿಸಲಿದ್ದು, ವೈಷ್ಣವಿ ಗೌಡ ಅವರ ಸೀತಾ ಪಾತ್ರವನ್ನು ಪಾತ್ರವನ್ನು ‘ಜಾನ್ಸಿ ಕಿ ರಾಣಿ’ ಧಾರಾವಾಹಿ ಖ್ಯಾತಿಯ ಉಲ್ಕಾ ಗುಪ್ತಾ ಮಾಡುತ್ತಿದ್ದಾರೆ. ಇದರ ಜತೆಗೆ ʼಸೀತಾ ರಾಮʼ ಮಲೆಯಾಳಂಗೂ ಡಬ್‌ ಆಗುತ್ತಿದೆ. ಝೀ ಕೇರಳಂ ವಾಹಿನಿಯಲ್ಲಿ ಇದು ಪ್ರಸಾರವಾಗಲಿದೆ.

ಇದನ್ನೂ ಓದಿ: Seetha Raama Serial: ಹಿಂದಿಗೆ ರಿಮೇಕ್‌ ಆಗ್ತಿದೆ ಕನ್ನಡದ ಈ ಜನಪ್ರಿಯ ಧಾರಾವಾಹಿ

ವಿಶೇಷ ಎಂದರೆ ʼಸೀತಾ ರಾಮʼ ಧಾರಾವಾಹಿಯೂ ರಿಮೇಕ್‌. ಇದು ಮರಾಠಿಯ ‘ಮಜಿ ತುಜಿ ರೆಶಿಮಗತ್’ ಧಾರಾವಾಹಿಯ ಕಥೆಯನ್ನು ಆಧರಿಸಿ ತಯಾರಾಗಿದೆ. ಈ ಧಾರಾವಾಹಿ ಝೀ ಮರಾಠಿಯಲ್ಲಿ 2021ರ ಆಗಸ್ಟ್​ನಿಂದ 2023ರ ಜನವರಿವರೆಗೆ ಪ್ರಸಾರವಾಗಿತ್ತು. 458 ಕಂತುಗಳನ್ನು ಹೊಂದಿದ್ದ ಇದರಲ್ಲಿ ಪ್ರಾರ್ಥನಾ ಬೆಹೆರೆ ಹಾಗೂ ಶ್ರೇಯಸ್ ತಲ್ಪಡೆ ಪ್ರಮುಖ ಪಾತ್ರದಲ್ಲಿ ಕಾಣಿಸಿಕೊಂಡಿದ್ದರು.

Continue Reading

ಕರ್ನಾಟಕ

Vidyarthi Vidyarthiniyare Movie: ವಿದ್ಯಾರ್ಥಿ ವಿದ್ಯಾರ್ಥಿನಿಯರೇ ಚಿತ್ರದ ಟ್ರೈಲರ್ ಔಟ್; ಧುಮ್ಮಿಕ್ಕಿದ ಹರೆಯದ ತೊರೆ!

Vidyarthi Vidyarthiniyare Movie: ರ‍್ಯಾಪರ್ ಚಂದನ್ ಶೆಟ್ಟಿ ಅಭಿನಯದ ಬಹು ನಿರೀಕ್ಷಿತ ʼವಿದ್ಯಾರ್ಥಿ ವಿದ್ಯಾರ್ಥಿನಿಯರೇ’ ಚಿತ್ರದ ಟ್ರೈಲರ್‌ ರಿಲೀಸ್‌ ಆಗಿದೆ. ಕಾಲೇಜು ಹುಡುಗ, ಹುಡುಗಿಯರ ಹದಿ ಹರೆಯದ ಹುಚ್ಚು ಮನಸ್ಸಿನ ಹೊಯ್ದಾಟವನ್ನು ಇಲ್ಲಿ ತೆರೆದಿಡಲಾಗಿದೆ.

VISTARANEWS.COM


on

Vidyarthi Vidyarthiniyare Movie
Koo

ಬೆಂಗಳೂರು: ರ‍್ಯಾಪರ್ ಚಂದನ್ ಶೆಟ್ಟಿ ನಾಯಕನಾಗಿ ನಟಿಸಿರುವ ಬಹು ನಿರೀಕ್ಷಿತ ʼವಿದ್ಯಾರ್ಥಿ ವಿದ್ಯಾರ್ಥಿನಿಯರೇ’ (Vidyarthi Vidyarthiniyare Movie) ಚಿತ್ರವು ಶೀರ್ಷಿಕೆಯಲ್ಲಿಯೇ ಟೀನೇಜ್ ಸ್ಟೋರಿಯ ಕಂಪು ಹೊಂದಿದ್ದು, ಈಗಾಗಲೇ ನಾನಾ ಕ್ರೀಯಾಶೀಲ ಚಟುವಟಿಕೆಗಳ ಮೂಲಕ ಪ್ರೇಕ್ಷಕರನ್ನು ತಲುಪಿತ್ತು. ಆ ಕಾರಣದಿಂದಲೇ ಎಲ್ಲರೂ ಟ್ರೈಲರ್‌ನತ್ತ ದೃಷ್ಟಿ ನೆಟ್ಟಿದ್ದರು. ಇದೀಗ ಚಿತ್ರತಂಡ ಯುವ ಆವೇಗದಿಂದ ತೊನೆದಾಡುತ್ತಿರುವಂತೆ ಭಾಸವಾಗುವ ಟ್ರೈಲರ್ ಅನ್ನು ಬಿಡುಗಡೆಗೊಳಿಸಿದೆ. ಅದರೊಳಗೆ ಹದಿಹರೆಯದ ಮನಸುಗಳ ನಾನಾ ಮಗ್ಗುಲುಗಳು ಹರೆಯದ ತೊರೆಯೊಂದಿಗೆ ಧುಮ್ಮಿಕ್ಕಿ ಹರಿದಿವೆ. ಈ ಟ್ರೈಲರ್ ಅನ್ನು ಸೈಡ್ ಎ ಅಂತ ಹೆಸರಿಸಲಾಗಿದೆ. ಇದನ್ನು ನೋಡುತ್ತಲೇ ಒಟ್ಟಾರೆ ಸಿನಿಮಾದಲ್ಲೇನೋ ಇದೆಯೆಂಬ ಗಟ್ಟಿಯಾದ ಭರವಸೆ ತಂತಾನೇ ಮೂಡುತ್ತದೆ. ಸೈಡ್ ಬಿ ಟ್ರೈಲರ್‌ಗಾಗಿ ಕಾತರವೂ ಮೂಡಿಕೊಳ್ಳುತ್ತೆ. ಅಷ್ಟರಮಟ್ಟಿಗೆ ಈ ಟ್ರೈಲರ್ ಪರಿಣಾಮಕಾರಿಯಾಗಿ ಮೂಡಿ ಬಂದಿದೆ!

ವಿದ್ಯಾರ್ಥಿ ವಿದ್ಯಾರ್ಥಿನಿಯರೇ’ ಟೈಟಲ್ಲೇ ಹೇಳುವಂತೆ ಯೂತ್ಸ್ ಸಬ್ಜೆಕ್ಟ್ ಸಿನಿಮಾ. ಕಾಲೇಜು ಹುಡುಗ, ಹುಡುಗಿಯರ, ಹದಿ ಹರೆಯದ ಹುಚ್ಚು ಮನಸ್ಸಿನ ಹೊಯ್ದಾಟವನ್ನು ಇಲ್ಲಿ ತೆರೆದಿಡಲಾಗಿದೆ. ಹಾಗಂತ ಇದು ಮಾಮೂಲಿಯಾಗೂ ಇದು ಸಿದ್ಧಸೂತ್ರದ ಚೌಕಟ್ಟಿಗೊಳಪಟ್ಟಿಲ್ಲ ಅನ್ನೋದು ಟ್ರೈಲರ್ ಎಳೆಯಲ್ಲಿ ಸ್ಪಷ್ಟವಾಗುತ್ತದೆ. ಹೊಡೆದಾಟ, ಬಡಿದಾಟ, ರ‍್ಯಾಗಿಂಗ್, ಬಿಸಿ ರಕ್ತದ ಹುಡುಗರ ಪುಂಡಾಟಿಕೆ ಸೇರಿ ಇಲ್ಲಿ ಎಲ್ಲವೂ ಇದೆ. ಅದರ ಜೊತೆ ಜೊತೆಗೇ ಶೈಕ್ಷಣಿಕ ಪರಿಸರದ ಕ್ರೌರ್ಯದ ಮುಖವೊಂದನ್ನು ಬಯಲಾಗಿಸುವ ಪ್ರಯತ್ನವೂ ಗಮನ ಸೆಳೆಯುವಂತಿದೆ. ಮೋಜು ಮಸ್ತಿಯಲ್ಲಿ ಮೈಮರೆತ ಮನಸ್ಥಿತಿಗಳ ಕಥೆಯ ಸೂಚನೆಯಿದೆ. ಹಿಡಿತ ತಪ್ಪಿದ ಮಕ್ಕಳನ್ನು ಹಾದಿಗೆ ತರುವ ಯತ್ನವೂ ಇದೆ. ಪ್ರಸ್ತುತ ಕಾಲದ ಟೀನೇಜ್ ಹುಡುಗರ ಕಹಾನಿಯನ್ನು ಎಳೆ ಎಳೆಯಾಗಿ ಬಿಚ್ಚಿಟ್ಟಿದೆ ಟ್ರೈಲರ್.

ಚಂದನ್ ಶೆಟ್ಟಿ ಈ ಚಿತ್ರದ ಮೂಲಕ ಡಿಫರೆಂಟಾಗಿ ಕಾಣಿಸಲಿದ್ದಾರೆಂಬ ನಿಖರ ಮಾಹಿತಿಯನ್ನು ನಿರ್ದೇಶಕ ಅರುಣ್ ಅಮುಕ್ತ ನೀಡುತ್ತಾ ಬಂದಿದ್ದಾರೆ. ಅವರ ಪಾತ್ರವನ್ನು ಅಷ್ಟೇ ಗೌಪ್ಯವಾಗಿ ಕಾಪಾಡಿಕೊಂಡು ಸಿನಿಮಾ ಮೇಲಿನ ಕುತೂಹಲವನ್ನು ಹೆಚ್ಚಿಸಿದೆ ಚಿತ್ರತಂಡ. ಒಟ್ಟಾರೆಯಾಗಿ ಟ್ರೈಲರ್ ನೋಡಿದರೆ ನಿರ್ದೇಶಕರು ಹೊಸದೇನನ್ನೋ ಹೇಳುವ ಪ್ರಯತ್ನ ಮಾಡಿದ್ದಾರೆ ಅನ್ನೋದು ಮೇಲ್ನೋಟಕ್ಕೆ ಎದ್ದು ಕಾಣುತ್ತಿದೆ. ಅರುಣ್ ಅಮುಕ್ತ ಅತ್ಯಂತ ಆಸ್ಥೆಯಿಂದ ಈ ಸಿನಿಮಾವನ್ನು ರೂಪಿಸಿದ್ದಾರೆಂಬುದಕ್ಕೂ ಕೂಡ ಈ ಟ್ರೈಲರಿನಲ್ಲಿ ಸಾಕ್ಷಿಗಳಿವೆ. ಕಾಲೇಜು ಕೇಂದ್ರಿತ ಕಥೆ ಅಂದಾಕ್ಷಣ ಒಂದು ಕಲ್ಪನೆ ಮೊಳೆತುಕೊಳ್ಳುತ್ತದೆ. ಅದನ್ನು ಮೀರಿದ ಆತ್ಮದೊಂದಿಗೆ ಅರುಣ್ ಅಮುಕ್ತ ಈ ಸಿನಿಮಾವನ್ನು ದೃಷ್ಯೀಕರಿಸಿರುವ ಲಕ್ಷಣಗಳಿವೆ. ಈವರೆಗೂ ಹಂತ ಹಂತವಾಗಿ ಕಾಯ್ದುಕೊಂಡಿದ್ದ ಕುತೂಹಲವನ್ನು ಈ ಸೈಡ್ ಎ ಟ್ರೈಲರ್ ಸಾರ್ಥಕಗೊಳಿಸಿದೆ.

ಇದನ್ನೂ ಓದಿ | Turbo Trailer Out: ಮಮ್ಮುಟ್ಟಿ ನಟನೆಯ ‘ಟರ್ಬೋ’ ಟ್ರೈಲರ್‌ ಔಟ್‌: ರಾಜ್‌ ಬಿ ಶೆಟ್ಟಿ ಖದರ್‌ಗೆ ಫ್ಯಾನ್ಸ್‌ ಫಿದಾ!

ಸುಬ್ರಮಣ್ಯ ಕುಕ್ಕೆ ಮತ್ತು ಎ.ಸಿ ಶಿವಲಿಂಗೇಗೌಡ ಈ ಚಿತ್ರವನ್ನು ನಿರ್ಮಾಣ ಮಾಡಿದ್ದಾರೆ. ಶ್ರೀಕಾಂತ್ ಜಿ. ಕಶ್ಯಪ್ ಕಾರ್ಯಕಾರಿ ನಿರ್ಮಾಪಕ, ಕುಮಾರ್ ಗೌಡ ಛಾಯಾಗ್ರಹಣ, ಭರ್ಜರಿ ಚೇತನ್ ಮತ್ತು ವಾಸುಕಿ ವೈಭವ್ ಸಾಹಿತ್ಯ, ಪವನ್ ಗೌಡ ಸಂಕಲನ, ಟೈಗರ್ ಶಿವು, ನರಸಿಂಹ ಸಾಹಸ ನಿರ್ದೇಶನ ಈ ಚಿತ್ರಕ್ಕಿರಲಿದೆ ಅರುಣ್ ಸುರೇಶ್ ಈ ಹಾಡಿಗೆ ಛಾಯಾಗ್ರಹಣ ಮಾಡಿದ್ದಾರೆ. ಚಂದನ್ ಶೆಟ್ಟಿ , ಅಮರ್, ಭಾವನಾ, ಮಾನಸಿ, ವಿವಾನ್, ಭವ್ಯ, ಸುನೀಲ್ ಪುರಾಣಿಕ್, ಅರವಿಂದ ರಾವ್, ಸಿಂಚನಾ, ರಘು ರಾಮನಕೊಪ್ಪ, ಪ್ರಶಾಂತ್ ಸಂಬರ್ಗಿ, ಕಾಕ್ರೋಚ್ ಸುಧಿ ಮುಂತಾದವರು ನಟಿಸಿದ್ದಾರೆ. ಇನ್ನುಳಿದಂತೆ ವಿಜೇತ್ ಕೃಷ್ಣ, ವಾಸು ದೀಕ್ಷಿತ್ ಸಂಗೀತ ನಿರ್ದೇಶನ ಈ ಚಿತ್ರಕ್ಕಿದೆ.

Continue Reading
Advertisement
Actor Diganth role in Crazystar Ravichandran The Judgement movie Kannada
ಸ್ಯಾಂಡಲ್ ವುಡ್7 mins ago

Actor Diganth: ಕ್ರೇಜಿಸ್ಟಾರ್ ರವಿಚಂದ್ರನ್ ಸಿನಿಮಾದಲ್ಲಿ ದಿಗಂತ್‌ ಪಾತ್ರ ಡಿಫರೆಂಟ್!

US sanction
ದೇಶ7 mins ago

US sanction: ನಿರ್ಬಂಧ ಹೇರುವ ಎಚ್ಚರಿಕೆ ನೀಡಿದ್ದ ಅಮೆರಿಕಕ್ಕೆ ಭಾರತ ತಿರುಗೇಟು

Shehbaz Sharif
ವಿದೇಶ26 mins ago

Shehbaz Sharif: ಎಲ್ಲ ಸರ್ಕಾರಿ ಸಂಸ್ಥೆಗಳನ್ನು ಮಾರಲು ನಿರ್ಧರಿಸಿದೆ ದಿವಾಳಿ ಪಾಕಿಸ್ತಾನ!

Rakhi Sawant Rushed to Hospital After Heart-Related Ailment
ಬಾಲಿವುಡ್40 mins ago

Rakhi Sawant: ಆಸ್ಪತ್ರೆಗೆ ದಾಖಲಾದ ನಟಿ ರಾಖಿ ಸಾವಂತ್‌

physical abuse gadag crime
ಕ್ರೈಂ53 mins ago

Physical Abuse: ಹಿಂದೂ ಯುವಕನ ಪ್ರೀತಿಸಿ ಮದುವೆಯಾದವಳಿಗೆ ಲೈಂಗಿಕ ಕಿರುಕುಳ, ಕಣ್ಣೀರಿಟ್ಟ ಮುಸ್ಲಿಂ ಮಹಿಳೆ

Narendra Modi
ದೇಶ55 mins ago

Narendra Modi: “ನಾನು ಹಿಂದೂ-ಮುಸ್ಲಿಂ ಅಂತ ಬೇಧ ಮಾಡಿದರೆ…”: ಪ್ರಧಾನಿ ಮೋದಿ ಹೇಳಿದ್ದೇನು?

Shamita Shetty Undergoes Surgery For Endometriosis
ಸಿನಿಮಾ1 hour ago

Shamita Shetty: ವಿಚಿತ್ರ ಕಾಯಿಲೆಗೆ ತುತ್ತಾದ ಶಿಲ್ಪಾ ಶೆಟ್ಟಿ ಸಹೋದರಿ ಶಮಿತಾ ಶೆಟ್ಟಿ: ಆಸ್ಪತ್ರೆಗೆ ದಾಖಲು

Road Accident
ಕ್ರೈಂ1 hour ago

Road Accident: ಭೀಕರ ರಸ್ತೆ ಅಪಘಾತ; ಮತ ಚಲಾಯಿಸಿ ತೆರಳುತ್ತಿದ್ದ 6 ಮಂದಿ ಸಜೀವ ದಹನ

Shrimad Ramayana udaya tv to telecasting kannada dubbing version
ಕಿರುತೆರೆ1 hour ago

Shrimad Ramayana: ಕಿರುತೆರೆಯಲ್ಲಿ ಪ್ರಸಾರವಾಗಲಿದೆ ‘ಶ್ರೀಮದ್ ರಾಮಾಯಣ’ ಮಹಾ ಕಾವ್ಯ: ಎಲ್ಲಿ? ಯಾವಾಗ?

Dolly Dhananjay Kotie Cinema Kannada
ಸ್ಯಾಂಡಲ್ ವುಡ್2 hours ago

Dolly Dhananjay: ʻಕೋಟಿʼ ಸಿನಿಮಾ ಮೊದಲ ಹಾಡು ಬಿಡುಗಡೆ!

Sharmitha Gowda in bikini
ಕಿರುತೆರೆ7 months ago

Geetha Serial Kannada: ನಿದ್ದೆ ಕದ್ದ ಚೋರಿ! ನಟಿ `ಭಾನುಮತಿ’ ಹಾಟ್‌ ಪೋಟೊಗಳಿಗೆ ಫ್ಯಾನ್ಸ್ ಫುಲ್ ಫಿದಾ

Kannada Serials
ಕಿರುತೆರೆ7 months ago

Kannada Serials TRP: 2ನೇ ಸ್ಥಾನದಲ್ಲಿ 2 ಧಾರಾವಾಹಿಗಳು; ಟಿಆರ್‌ಪಿ ರೇಸ್‌ನಲ್ಲಿಲ್ಲ ಭಾಗ್ಯಲಕ್ಷ್ಮೀ!

Bigg Boss- Saregamapa 20 average TRP
ಕಿರುತೆರೆ7 months ago

Kannada Serials TRP: ಏಳನೇ ಸ್ಥಾನಕ್ಕೆ ʻಅಮೃತಧಾರೆʼ ಕುಸಿತ; ಬಿಗ್‌ ಬಾಸ್‌-ಸರಿಗಮಪ ಟಿಆರ್‌ಪಿ ಎಷ್ಟು?

galipata neetu
ಕಿರುತೆರೆ6 months ago

Kanyadana Serial: ಕಿರುತೆರೆಗೆ ಮತ್ತೆ ಎಂಟ್ರಿ ಕೊಟ್ಟ ʻಗಾಳಿಪಟʼ ಖ್ಯಾತಿಯ ʻನೀತುʼ!

Kannada Serials
ಕಿರುತೆರೆ8 months ago

Kannada Serials TRP: ನಾಲ್ಕನೇ ಸ್ಥಾನಕ್ಕೆ ಕುಸಿತ ಕಂಡ ʻಸೀತಾ ರಾಮʼ; ಟಿಆರ್‌ಪಿ ರೇಸ್‌ಗೆ ʻಭಾಗ್ಯಲಕ್ಷ್ಮಿʼ ಬ್ಯಾಕ್‌!

Kannada Serials
ಕಿರುತೆರೆ7 months ago

Kannada Serials TRP: ಟಿಆರ್‌ಪಿಯಲ್ಲಿ ʻಭಾಗ್ಯಲಕ್ಷ್ಮೀʼ ಹವಾ; ʻಪುಟ್ಟಕ್ಕನ ಮಕ್ಕಳುʼ ಧಾರಾವಾಹಿಗೆ ಸಂಕಷ್ಟ!

Bigg Boss' dominates TRP; Sita Rama fell to the sixth position
ಕಿರುತೆರೆ7 months ago

Kannada Serials TRP: ಟಿಆರ್‌ಪಿಯಲ್ಲಿ ʻಬಿಗ್ ಬಾಸ್ʼದೇ ಮೇಲುಗೈ; 6ನೇ ಸ್ಥಾನಕ್ಕೆ ಕುಸಿದ ʻಸೀತಾ ರಾಮʼ

geetha serial Dhanush gowda engagement
ಕಿರುತೆರೆ5 months ago

Dhanush Gowda: ಗೀತಾ ಧಾರಾವಾಹಿ ನಟನ ನಿಶ್ಚಿತಾರ್ಥ; ಭವ್ಯಾಳ ಕಮೆಂಟ್‌ ಬಾಕ್ಸ್‌ ಆಫ್‌!

varun
ಕಿರುತೆರೆ6 months ago

Brindavana Serial: ʼಬೃಂದಾವನʼ ಧಾರಾವಾಹಿಯಲ್ಲಿ ದೊಡ್ಡ ಟ್ವಿಸ್ಟ್‌; ಪ್ರಮುಖ ಪಾತ್ರಧಾರಿಯೇ ಬದಲು

Kannada Serials
ಕಿರುತೆರೆ8 months ago

Kannada Serials TRP: ಟಿಆರ್‌ಪಿಯಲ್ಲಿ ಏರಿಕೆ ಕಂಡ ʻಅಮೃತಧಾರೆʼ; ʻಗಟ್ಟಿಮೇಳʼಕ್ಕೆ ನಾಲ್ಕನೇ ಸ್ಥಾನ!

Prajwal Revanna Case
ಕರ್ನಾಟಕ4 hours ago

Prajwal Revanna Case: ಪ್ರಜ್ವಲ್‌ ರೇವಣ್ಣ ಇಂದೇ ಜರ್ಮನಿಯಿಂದ ಭಾರತಕ್ಕೆ? ಎಸ್‌ಐಟಿ ಅಲರ್ಟ್‌

Dina Bhavishya
ಭವಿಷ್ಯ6 hours ago

Dina Bhavishya : ಭೂ ವ್ಯವಹಾರಕ್ಕೆ ಇದು ಸೂಕ್ತ ಸಮಯ; ವ್ಯಾಪಾರದಲ್ಲಿ ಡಬಲ್‌ ಲಾಭ

HD Revanna Released first reaction after release will be acquitted of all charges
ರಾಜಕೀಯ16 hours ago

HD Revanna Released: ರಿಲೀಸ್‌ ಬಳಿಕ ರೇವಣ್ಣ ಫಸ್ಟ್‌ ರಿಯಾಕ್ಷನ್;‌ ನ್ಯಾಯಾಂಗದ ಮೇಲೆ ನಂಬಿಕೆ ಇದೆ; ಆರೋಪ ಮುಕ್ತನಾಗುವೆ

CM Siddaramaiah says Our government is stable for 5 years BJP will disintegrate
Lok Sabha Election 202418 hours ago

CM Siddaramaiah: ನಮ್ಮ ಸರ್ಕಾರ 5 ವರ್ಷ ಸುಭದ್ರ; ಚುನಾವಣೆ ಬಳಿಕ ಬಿಜೆಪಿ ಛಿದ್ರ ಎಂದ ಸಿಎಂ ಸಿದ್ದರಾಮಯ್ಯ!

I dont want to go to other states for Lok Sabha Election 2024 campaign for Congress says CM Siddaramaiah
Lok Sabha Election 202422 hours ago

CM Siddaramaiah: ಕಾಂಗ್ರೆಸ್‌ ಪರ ಬೇರೆ ರಾಜ್ಯಗಳಿಗೆ ಪ್ರಚಾರಕ್ಕೆ ಹೋಗಲು ನನಗೆ ಇಷ್ಟವಿಲ್ಲ: ಸಿಎಂ ಸಿದ್ದರಾಮಯ್ಯ!

HD Revanna Bail I am not happy that Revanna has been released says HD Kumaraswamy
ರಾಜಕೀಯ22 hours ago

HD Revanna Bail: ರೇವಣ್ಣ ಬಿಡುಗಡೆಯಾಗಿದ್ದಕ್ಕೆ ನಾನಂತೂ ಖುಷಿ ಪಡಲ್ಲ ಎಂದ ಎಚ್‌ಡಿಕೆ!

karnataka Rain Effected
ಬೆಂಗಳೂರು24 hours ago

Karnataka Rain: ಮಿಡ್‌ನೈಟ್‌ ಮಳೆ ಅವಾಂತರ; ಮರಗಳು, ವಿದ್ಯುತ್‌ ಕಂಬಗಳು ಧರೆಗೆ, ಕುಸಿದು ಬಿದ್ದ ಮನೆ

Dina Bhavishya
ಭವಿಷ್ಯ1 day ago

Dina Bhavishya : ಉದ್ಯೋಗದ ಸ್ಥಳದಲ್ಲಿ ನಿಮ್ಮ ವಿರುದ್ಧ ಪಿತೂರಿ ಮಾಡ್ಬಹುದು ಎಚ್ಚರ!

HD Revanna Bail Revanna will not leave the country condition imposed by the court
ಕ್ರೈಂ2 days ago

HD Revanna Bail: ರೇವಣ್ಣ ದೇಶ ಬಿಡಂಗಿಲ್ಲ, ಕೆ.ಆರ್‌. ನಗರಕ್ಕೆ ಎಂಟ್ರಿ ಕೊಡಂಗಿಲ್ಲ! ಕೋರ್ಟ್‌ ವಿಧಿಸಿದ ಷರತ್ತು ಏನು?

HD Revanna Bail
ಕ್ರೈಂ2 days ago

HD Revanna Bail: ಎಚ್‌.ಡಿ ರೇವಣ್ಣಗೆ ಕೊನೆಗೂ ಜಾಮೀನು; ಎಸ್‌ಐಟಿಗೆ ಮುಖಭಂಗ!

ಟ್ರೆಂಡಿಂಗ್‌