Yadgiri News: ಮಕ್ಕಳು ಶ್ರದ್ಧೆಯಿಂದ ಓದಿದರೆ ಗುರಿ ಸಾಧನೆ: ಶಾಂತಮಲ್ಲಿಕಾರ್ಜುನ ಸ್ವಾಮೀಜಿ - Vistara News

ಯಾದಗಿರಿ

Yadgiri News: ಮಕ್ಕಳು ಶ್ರದ್ಧೆಯಿಂದ ಓದಿದರೆ ಗುರಿ ಸಾಧನೆ: ಶಾಂತಮಲ್ಲಿಕಾರ್ಜುನ ಸ್ವಾಮೀಜಿ

Yadgiri News: ಯಾದಗಿರಿ ನಗರದ ನವನಂದಿ ಶಿಕ್ಷಣ ಸಂಸ್ಥೆಯ ನವನಂದಿ ಶಾಲೆಯ ದಶಕದ ಸಂಭ್ರಮ ಕಾರ್ಯಕ್ರಮ ಜರುಗಿತು.

VISTARANEWS.COM


on

Navanandi School Decade Celebration Programme at yadgiri
ಮಹತ್ವದ, ಕುತೂಹಲಕರ ಸುದ್ದಿಗಾಗಿ ಫಾಲೊ ಮಾಡಿ
Koo

ಯಾದಗಿರಿ: ಮಕ್ಕಳು ಜೀವನದಲ್ಲಿ ಸಮಯ ಪಾಲನೆ, ಶಿಸ್ತು ಪಾಲನೆ ಮಾಡಿಕೊಂಡು ಶ್ರದ್ಧೆಯಿಂದ ಓದಿ ಗುರಿ ಸಾಧಿಸಬೇಕು ಎಂದು ಹೆಡಗಿಮುದ್ರಾಮಠದ ಶಾಂತಮಲ್ಲಿಕಾರ್ಜುನ ಸ್ವಾಮೀಜಿ (Yadgiri News) ತಿಳಿಸಿದರು.

ನಗರದ ನವನಂದಿ ಶಿಕ್ಷಣ ಸಂಸ್ಥೆಯ ನವನಂದಿ ಶಾಲೆಯ ದಶಕದ ಸಂಭ್ರಮ ಕಾರ್ಯಕ್ರಮವನ್ನು ಉದ್ಘಾಟಿಸಿ ನಂತರ ಶ್ರೀಗಳು ಆಶೀರ್ವಚನ ನೀಡಿದರು.

ಮಕ್ಕಳು ಪಠ್ಯೇತರ ಚಟುವಟಿಕೆಗಳಲ್ಲಿ ತೊಡಗಿಸಿಕೊಳ್ಳುವುದರಿಂದ ಅವರಲ್ಲಿನ ಪ್ರತಿಭೆ ಗುರುತಿಸಲು ಸಹಾಯವಾಗಲಿದೆ. ಪೋಷಕರು ಮಕ್ಕಳ ಪ್ರತಿಭೆಯನ್ನು ಅರಿತು ಪ್ರೋತ್ಸಾಹಿಸಬೇಕಿದೆ. ಬದುಕಿನಲ್ಲಿ ಮಕ್ಕಳು ಛಲಹೊಂದಿ ಗುರಿ ಸಾಧಿಸಿ, ಕೀರ್ತಿ ತರುವ ಕಾರ್ಯ ಮಾಡಬೇಕು ಎಂದು ಹೇಳಿದರು.

ಇದನ್ನೂ ಓದಿ: Sensex Jump : ಷೇರು ಮಾರುಕಟ್ಟೆಯಲ್ಲಿ ಮಿಂಚಿನ ಸಂಚಾರ; 1000 ಅಂಕಗಳಷ್ಟು ಏರಿಕೆ

ಕಾರ್ಯಕ್ರಮದಲ್ಲಿ ಡಿಡಿಪಿಐ ಮಂಜುನಾಥ್ ಎಚ್.ಟಿ. ಮಾತನಾಡಿ, ನವನಂದಿ ಶಾಲೆಯಲ್ಲಿ ಪಠ್ಯದ ಜತೆಗೆ ಅನೇಕ ಪಠ್ಯೇತರ ಚಟುವಟಿಕೆಗಳಿಗೆ ಪ್ರೋತ್ಸಾಹಿಸಿಕೊಂಡು ಬರಲಾಗುತ್ತಿದೆ ಎಂದ ಅವರು, ಮಕ್ಕಳ ಆಸಕ್ತಿ ಅರಿತು ಅವರಿಗೆ ಪ್ರೋತ್ಸಾಹಿಸಬೇಕಿದೆ ಎಂದು ತಿಳಿಸಿದರು.

ಇದೇ ವೇಳೆ ಶಾಲೆ ಮಕ್ಕಳಿಂದ ನಡೆದ ವಿವಿಧ ಸಾಂಸ್ಕೃತಿಕ ಕಾರ್ಯಕ್ರಮಗಳು ಗಮನ ಸೆಳೆದವು.

ಇದನ್ನೂ ಓದಿ: Blast in Bangalore : ಬೆಂಗಳೂರಿನ ರಾಮೇಶ್ವರಂ ಕೆಫೆಯಲ್ಲಿ ಭಾರಿ ಸ್ಫೋಟ; ಐವರು ಗಂಭೀರ

ಈ ಸಂದರ್ಭದಲ್ಲಿ ಸಂಸ್ಥೆಯ ಅಧ್ಯಕ್ಷ ಬಸವರಾಜ ಎಲ್ಹೇರಿ, ಡಾ.ನೀಲಮ್ಮ ಶಿವರಾಯ ಎಲ್ಹೇರಿ, ಡಾ.ವೀರಭದ್ರಪ್ಪ ಎಲ್ಹೇರಿ, ಶರಣಮ್ಮ ಪಾಟೀಲ ಸೇರಿದಂತೆ ಇತರರು ಉಪಸ್ಥಿತರಿದ್ದರು.

ಕ್ಷಣ ಕ್ಷಣದ ಮಾಹಿತಿಗಾಗಿ Vistara News FaceBook ಪೇಜ್ ಫಾಲೋ ಮಾಡಿ
ಮಹತ್ವದ ಮಾಹಿತಿಗಾಗಿ ವಿಸ್ತಾರ ನ್ಯೂಸ್ ಆ್ಯಪ್ ಉಚಿತವಾಗಿ ಡೌನ್ ಲೋಡ್ ಮಾಡಿಕೊಳ್ಳಿ: Andriod App | IOS App
Continue Reading
Click to comment

Leave a Reply

Your email address will not be published. Required fields are marked *

ಮಳೆ

Karnataka Rain : ಬಂಗಾಳ ಕೊಲ್ಲಿಯಲ್ಲಿ ವಾಯುಭಾರ ಕುಸಿತ; ಸಮುದ್ರಕ್ಕಿಳಿಯದಂತೆ ಮೀನುಗಾರರಿಗೆ ಎಚ್ಚರಿಕೆ

Karnataka Rain : ರಾಜ್ಯದಲ್ಲಿ ಮಳೆ ಅವಾಂತರ ಮುಂದುವರಿದಿದೆ. ಬಂಗಾಳ ಕೊಲ್ಲಿಯಲ್ಲಿ ವಾಯುಭಾರ ಕುಸಿತ ಉಂಟಾಗಿದ್ದು, ಸಮುದ್ರಕ್ಕಿಳಿಯದಂತೆ ಮೀನುಗಾರರಿಗೆ ಎಚ್ಚರಿಕೆಯನ್ನು ನೀಡಲಾಗಿದೆ.

VISTARANEWS.COM


on

By

Karnataka Rain
ಭಾರಿ ಮಳೆಗೆ ಕೊಚ್ಚಿ ಹೋದ ಬೆಳೆಗಳು
Koo

ಮಂಗಳೂರು: ಬಂಗಾಳ ಕೊಲ್ಲಿಯಲ್ಲಿ ವಾಯುಭಾರ ಕುಸಿತ ಉಂಟಾಗಿದ್ದು, ದಕ್ಷಿಣ ಕನ್ನಡ ಜಿಲ್ಲೆಯ ಸಮುದ್ರ ತೀರದಲ್ಲಿ ಹೈ ಅಲರ್ಟ್ ಘೋಷಣೆ ಮಾಡಲಾಗಿದೆ. ಸಮುದ್ರಕ್ಕಿಳಿಯದಂತೆ ಮಂಗಳೂರಿನ ಮೀನುಗಾರರಿಗೆ ಎಚ್ಚರಿಕೆ ನೀಡಲಾಗಿದೆ. ದಕ್ಷಿಣ ಕನ್ನಡದಲ್ಲಿ 115 .5 ಮಿಮಿ ನಿಂದ 204 .5 ಮಿಮಿ ಮಳೆಯಾಗುವ (Karnataka Rain) ಸಾಧ್ಯತೆ ಇದ್ದು, ಎರಡು ದಿನಕ್ಕೆ ಆರೆಂಜ್ ಅಲರ್ಟ್ ನೀಡಲಾಗಿದೆ.

ಕರಾವಳಿಯುದ್ದಕ್ಕೂ ಬಿರುಗಾಳಿ ಬೀಸುವ ಸಾಧ್ಯತೆ ಇದೆ. ಹೀಗಾಗಿ ಮೀನುಗಾರಿಕೆಗೆ ತೆರಳದಂತೆ ದಕ್ಷಿಣ ಕನ್ನಡ ಜಿಲ್ಲಾಡಳಿತ ಎಚ್ಚರಿಕೆ ನೀಡಿದೆ. ಈಗಾಗಲೇ ಸಮುದ್ರಕ್ಕೆ ತೆರಳಿದ ಮೀನುಗಾರಿಕಾ ಬೋಟ್‌ಗಳಿಗೆ ತಕ್ಷಣ ದಡಕ್ಕೆ ಬರುವಂತೆ ಸೂಚನೆಯನ್ನು ನೀಡಲಾಗಿದೆ. ಗಂಟೆಗೆ 45 ಕಿ.ಮೀ ನಿಂದ 55 ಕಿ.ಮೀ ವೇಗದಲ್ಲಿ ಗಾಳಿ ಬೀಸುವ ಸಾಧ್ಯತೆ ಇದೆ.

ದಾವಣಗೆರೆಯಲ್ಲಿ ನಿಯಂತ್ರಣ ತಪ್ಪಿ ಕೊಚ್ಚಿಹೋದ ಕಾರು

ದಾವಣಗೆರೆ ಜಿಲ್ಲೆಯ ಜಗಳೂರಿನಲ್ಲಿ ಭರ್ಜರಿ ಮಳೆಯಾಗುತ್ತಿದೆ. ಭಾನುವಾರ ರಾತ್ರಿ ಸುರಿದ ಮಳೆಯಿಂದಾಗಿ ಜಗಳೂರಿನ ಕಾನನಕಟ್ಟೆ ಗ್ರಾಮದ ಸೇತುವೆ ಮೇಲೆ ನೀರು ಹರಿದಿದೆ. ಹರಿಯುತ್ತಿರುವ ನೀರಿನಲ್ಲೇ ಕಾರು ಚಲಾಯಿಸುವಾಗ ಚಾಲಕ‌ನ ನಿಯಂತ್ರಣ ತಪ್ಪಿ ಕಾರು ಕೊಚ್ಚಿಹೋಗಿದೆ. ಕೂಡಲೇ ಸ್ಥಳೀಯರಿಂದ ಕಾರು ಚಾಲಕ ಹಾಗೂ ಪ್ರಯಾಣಿಕರನ್ನು ರಕ್ಷಣೆ ಮಾಡಲಾಗಿದೆ. ಜತೆಗೆ ಕೊಚ್ಚಿ ಹೋದ ಕಾರನ್ನು ದಡಕ್ಕೆ ಎಳೆದು ತಂದಿದ್ದಾರೆ. ಜಗಳೂರಿನ ದೊಡ್ಡ ಬೊಮ್ಮನಹಳ್ಳಿ, ಸೇರಿದಂತೆ ಹಲವು ಕಡೆ ಚೆಕ್ ಡ್ಯಾಂಗಳು ತುಂಬಿ ಹರಿಯುತ್ತಿವೆ.

karnataka rain

ಶಿವಮೊಗ್ಗದಲ್ಲಿ ಮನೆ ಮೇಲೆ ಬಿದ್ದ ಅರಳಿ ಮರ

ಶಿವಮೊಗ್ಗ ಜಿಲ್ಲೆಯಲ್ಲಿ ಮಳೆಯ ಆರ್ಭಟ ಮುಂದುವರಿದಿದ್ದು, ಸಾಕಷ್ಟು ಅವಾಂತರ ಸೃಷ್ಟಿಯಾಗಿದೆ. ಶಿವಮೊಗ್ಗದ ಸೊರಬ ಪಟ್ಟಣದಲ್ಲಿ ಮನೆ ಮೇಲೆ ಬೃಹತ್ ಅರಳಿ ಮರ, ತೆಂಗಿನ ಮರ ಬಿದ್ದು ಹಾನಿಯಾಗಿದೆ. ಭಾಗ್ಯ ಎಂಬುವರಿಗೆ ಸೇರಿದ ಮನೆ ಸಂಪೂರ್ಣ ದ್ವಂಸವಾಗಿದ್ದು,ಭಾಗ್ಯ ಅವರು ಗಾಯಗೊಂಡಿದ್ದು, ಸ್ಥಳೀಯ ಆಸ್ಪತ್ರೆಗೆ ದಾಖಲು ಮಾಡಲಾಗಿದೆ. ಮನೆ ಮೇಲೆ ಬೃಹತ್ ಮರ ಬಿದ್ದ ಪರಿಣಾಮ ಮನೆಯಲ್ಲಿದ್ದ ಗೃಹಪಯೋಗಿ ವಸ್ತುಗಳು ಹಾನಿಯಾಗಿವೆ. ಸ್ಥಳಕ್ಕೆ ತಹಸೀಲ್ದಾರ್ ಭೇಟಿ ನೀಡಿ ಪರಿಶೀಲನೆ ನಡೆಸಿದ್ದು, ಸೂಕ್ತ ಪರಿಹಾರ ನೀಡುವಂತೆ ಮನೆ ಮಾಲೀಕರು ಮನವಿ ಮಾಡಿದ್ದಾರೆ.

ಇದನ್ನೂ ಓದಿ: Rain news: ಚಾರ್ಮಾಡಿ ಘಾಟಿಯಲ್ಲಿ ಮಳೆಗೆ ಸಿಲುಕಿಕೊಂಡ ನೂರಾರು ಪ್ರಯಾಣಿಕರು

ಕೋಲಾರದಲ್ಲಿ ಮಳೆಗೆ ಬೆಳೆಗಳು ನೀರುಪಾಲು

ಕೋಲಾರದಲ್ಲಿ ಧಾರಾಕಾರ ಮಳೆಯಾಗುತ್ತಿದ್ದು, ಮಲ್ಲಸಂದ್ರ ಗ್ರಾಮದಲ್ಲಿ ಬೆಳೆಗಳು ನೀರುಪಾಲಾಗಿದೆ. ಕೋಲಾರ ತಾಲೂಕಿನ ನರಸಾಪುರ ಹೋಬಳಿಯ ಮಲ್ಲಸಂದ್ರ ಗ್ರಾಮದಲ್ಲಿ ನಿನ್ನೆ ಭಾನುವಾರ ಸಂಜೆ ಸುರಿದ ಮಳೆಗೆ ಬೆಳೆಗಳು ಜಲಾವೃತಗೊಂಡಿದೆ. ಮಳೆಯ ನೀರಿನಲ್ಲಿ ಸೌತೆಕಾಯಿ, ಬೀನ್ಸ್, ಹೂ ಬೆಳೆಗಳು ಕೊಚ್ಚಿಹೋಗಿವೆ. ಅವೈಜ್ಞಾನಿಕ ಲೇಔಟ್ ನಿರ್ಮಾಣ ಮಾಡಿರುವುದೇ ಇದಕ್ಕೆಲ್ಲ ಕಾರಣ ಎಂದು ರೈತರು ಆರೋಪಿಸಿದ್ದಾರೆ. ದೊಂಬರಹಳ್ಳಿ ಗ್ರಾಮದ ವ್ಯಾಪ್ತಿಯಲ್ಲಿರುವ ಲೇಔಟ್‌ನಲ್ಲಿ ಮಳೆಯ ನೀರು ಹರಿಯಲು ಯಾವುದೇ ಕಾಲುವೆ ಮಾಡಿಲ್ಲ. ಇದರಿಂದ ಮಳೆ ಬಿದ್ದಾಗಲೆಲ್ಲಾ ಲೇಔಟ್‌ನಿಂದ ಹರಿದು ಬರುವ ನೀರು ತೋಟಗಳಿಗೆ ನುಗ್ಗುತ್ತಿದೆ ಎಂದು ಕಿಡಿಕಾರಿದ್ದಾರೆ.

ಚಿಕ್ಕಮಗಳೂರಿನ ಮಳೆ ಅಬ್ಬರಕ್ಕೆ ಕುಸಿದ ಮನೆ

ಚಿಕ್ಕಮಗಳೂರಿನಲ್ಲಿ ಭಾನುವಾರ ರಾತ್ರಿ ಸುರಿದ ಗಾಳಿ-ಮಳೆಗೆ ಮನೆ ಕುಸಿದಿದೆ. ಎನ್.ಆರ್.ಪುರ ತಾಲೂಕಿನ ಕರ್ಕೇಶ್ವರ ಗ್ರಾಮದಲ್ಲಿ ಘಟನೆ ನಡೆದಿದೆ. ಗುಲಾಬಿ ಎಂಬಾಕೆಯ ಮನೆ ಕುಸಿದಿದೆ. ಒಂಟಿ ಮಹಿಳೆಯಾಗಿರುವ ಗುಲಾಬಿ, ಕಾಫಿ ತೋಟದಲ್ಲಿ ಕೆಲಸ ಮಾಡುತ್ತಿದ್ದು, ಗಾಳಿ-ಮಳೆಗೆ ಇದ್ದವೊಂದು ಮನೆಯೂ ನೆಲಸಮವಾಗಿದೆ ಎಂದು ಕಂಗಲಾಗಿದ್ದಾರೆ. ಸ್ಥಳಕ್ಕೆ ಅಧಿಕಾರಿಗಳು ಭೇಟಿ ನೀಡಿ ಪರಿಶೀಲನೆ ನಡೆಸಿದ್ದು, ಸ್ಥಳೀಯರಿಂದ ನಿರ್ಗತಿಕ ಮಹಿಳೆಗೆ ಸಹಾಯ ಮಾಡಿದ್ದಾರೆ.

ಈ ಸಂಗತಿಯ ಕುರಿತು ನಿಮ್ಮ ಅನಿಸಿಕೆ ಏನು? ಕಾಮೆಂಟ್ ಮೂಲಕ ತಿಳಿಸಿ

Continue Reading

ಮಳೆ

Rain news: ಚಾರ್ಮಾಡಿ ಘಾಟಿಯಲ್ಲಿ ಮಳೆಗೆ ಸಿಲುಕಿಕೊಂಡ ನೂರಾರು ಪ್ರಯಾಣಿಕರು

Rain news: ಚಿಕ್ಕಮಗಳೂರು ಜಿಲ್ಲೆಯ ಚಾರ್ಮಾಡಿ ಘಾಟಿಯಲ್ಲಿ ನೂರಾರು ಪ್ರಯಾಣಿಕರು ಮಳೆಗೆ ಸಿಕ್ಕಿಹಾಕಿಕೊಂಡರು. ತುಮಕೂರು ಮುಂತಾದ ಕಡೆ ಮಳೆ ಹಾವಳಿ ಎಬ್ಬಿಸಿದೆ.

VISTARANEWS.COM


on

rain news charamadi ghat traffic jam
Koo

ಚಿಕ್ಕಮಗಳೂರು: ಚಿಕ್ಕಮಗಳೂರು- ಮಂಗಳೂರು ಸಂಪರ್ಕ ಕಲ್ಪಿಸುವ ಚಾರ್ಮಾಡಿ ಘಾಟಿ (Charmadi Ghat) ಹೆದ್ದಾರಿಯಲ್ಲಿ (Highway) ಮಳೆಯ ಪರಿಣಾಮ ಹಾಗೂ ಕೆಎಸ್‌ಆರ್‌ಟಿಸಿ ಬಸ್‌ (KSRTC Bus) ಹಾಳಾಗಿ ನಿಂತುದರಿಂದ ನೂರಾರು ಪ್ರಯಾಣಿಕರು ಮಳೆಯಲ್ಲಿ (Rain news) ಸಿಲುಕಿಕೊಂಡು ಪಾಡು ಪಟ್ಟಿದ್ದಾರೆ. ನಿನ್ನೆ ಸಂಜೆಯಿಂದ ಸುರಿಯುತ್ತಿರುವ ಭಾರಿ ಮಳೆಗೆ ದಾರಿ ಕಾಣದೆ ವಾಹನ ಸವಾರರು ರಸ್ತೆ ಬದಿಯಲ್ಲಿ ವಾಹನ ನಿಲ್ಲಿಸಿದುದರಿಂದ ಟ್ರಾಫಿಕ್‌ ಜಾಮ್‌ (Traffic jam) ಉಂಟಾಯಿತು. ಜೊತೆಗೆ ಎರಡು ಕೆಎಸ್‌ಆರ್‌ಟಿಸಿ ಬಸ್ಸುಗಳು ಕೆಟ್ಟು ನಿಂತ ಪರಿಣಾಮ, ವಾಹನಗಳು ಅತ್ತಿತ್ತ ಹೋಗಲಾಗದೆ ಪ್ರಯಾಣಿಕರು ಬವಣೆ ಅನುಭವಿಸಿದರು.

ಚಾರ್ಮಾಡಿ ಘಾಟಿನ ಅಣ್ಣಪ್ಪ ಸ್ವಾಮಿ ದೇವಾಲಯದ ಬಳಿ ಮಳೆಯ ನಡುವೆ KSRTC ಬಸ್ಸುಗಳೆರಡು ಕೆಟ್ಟು ರಸ್ತೆ ಮಧ್ಯದಲ್ಲಿ ನಿಂತವು. ಬಸ್ಸುಗಳು ಕೆಟ್ಟು ನಿಂತ ಪರಿಣಾಮ ಕಿಲೋಮೀಟರ್‌ಗಳಷ್ಟು ದೂರ ಟ್ರಾಫಿಕ್ ಜಾಮ್ ಉಂಟಾಯಿತು. ಹೀಗಾಗಿ ಬೆಳಗಿನ ಜಾವದಿಂದ ನೂರಾರು ವಾಹನಗಳು ನಿಂತಲ್ಲೇ ನಿಂತವು. ನಿರಂತರ ಮಳೆಯಲ್ಲಿ ಪ್ರಯಾಣಿಕರು ಬಾಕಿಯಾದರು. ಮಂಗಳೂರಿಗೆ ರೋಗಿಯನ್ನು ಒಯ್ಯುತ್ತಿದ್ದ ಒಂದು ಆಂಬ್ಯುಲೆನ್ಸ್ ಟ್ರಾಫಿಕ್ ನಡುವೆ ಸಿಲುಕಿಕೊಂಡಿತು. ಟ್ರಾಫಿಕ್ ಕ್ಲಿಯರ್ ಮಾಡಲು ಬಣಕಲ್, ಮೂಡಿಗೆರೆ ಪೊಲೀಸರು ಹರಸಾಹಸಪಟ್ಟರು.

ಚಿಕ್ಕಮಗಳೂರು ಜಿಲ್ಲೆಯ ಹಲವಡೆ ಮಳೆಯ ಆರ್ಭಟ ಮುಂದುವರಿದಿದೆ. ಚಿಕ್ಕಮಗಳೂರು, ಕೊಪ್ಪ, ಕಡೂರು, ಕಳಸಾಪುರ, ಪಂಚನಹಳ್ಳಿ, ಬೀರೂರು, ಶಿವನಿ, ಬೆಳವಾಡಿ, ಮೂಡಿಗೆರೆ, ಹಿರೇನಲ್ಲೂರು, ಚಿಕ್ಕನಲ್ಲೂರು, ಭಾಗದಲ್ಲಿ ಭಾರಿ ಮಳೆಯಾಗಿದ್ದು, ಜಿಲ್ಲೆಯ ಗ್ರಾಮಾಂತರ ಭಾಗದಲ್ಲಿ ವಿದ್ಯುತ್ ಸ್ಥಗಿತವಾಗಿದೆ.

ಚಿಕ್ಕಮಗಳೂರು ತಾಲೂಕಿನ ಈಶ್ವರಹಳ್ಳಿ ಗ್ರಾಮದಲ್ಲಿ ರೈತ ಬಸವರಾಜು ಎಂಬವರಿಗೆ ಸೇರಿದ 4 ಎಕರೆ ಬಾಳೆ ತೋಟ ಭಾರಿ ಗಾಳಿ ಮಳೆಗೆ ನೆಲಕಚ್ಚಿದೆ. ಕೇವಲ ಇನ್ನೊಂದು ತಿಂಗಳಲ್ಲಿ ಕಟಾವಿಗೆ ಬರಬೇಕಿದ್ದ ಬೆಳೆ ನಾಶವಾಗಿದ್ದು, ಲಕ್ಷಾಂತರ ರೂಪಾಯಿ ಬೆಳೆ ನಷ್ಟವಾಗಿ ರೈತ ಕಂಗಾಲಾಗಿದ್ದಾರೆ

ಚಿಕ್ಕಮಗಳೂರಿನ ಬಯಲು ಸೀಮೆ ಭಾಗದಲ್ಲಿ ಮಳೆ ಅಬ್ಬರ ಮುಂದುವರಿದಿದ್ದು, ಭಾರಿ ಮಳೆಗೆ ಹಳ್ಳ ಕೊಳ್ಳಗಳು ತುಂಬಿ ಹರಿದಿವೆ. ರಾತ್ರಿಯಿಡೀ ಸುರಿದ ಮಳೆಗೆ ಹೊಂಗೆ ಹಳ್ಳ ಉಕ್ಕಿ ಹರಿಯುತ್ತಿದ್ದು, ಅಜ್ಜಂಪುರ ತಾಲೂಕಿನ ಐತಿಹಾಸಿಕ ಶಿವನಿ ಕೆರೆಗೆ ಭಾರಿ ಪ್ರಮಾಣದ ನೀರು ಬಂದಿದೆ. ಹೊಂಗೆ ಹಳ್ಳದ ಸುತ್ತಮುತ್ತಲಿನ ಕೆಲವು ತೋಟಗಳು ಜಲಾವೃತವಾಗಿವೆ. ಸೇತುವೆ ರಸ್ತೆಯ ಮೇಲೆ ಹಳ್ಳದ ನೀರು ಹರಿಯಿತು.

ದೇವಾಲಯದ ಶಿಖರಕ್ಕೆ ಸಿಡಿಲು

ಯಾದಗಿರಿ: ಜಿಲ್ಲೆಯ ದೋರನಹಳ್ಳಿ ಗ್ರಾಮದ ಶ್ರೀ ಪರಮಾನಂದೇಶ್ವರ ದೇವಸ್ಥಾನದ ಶಿಖರಕ್ಕೆ ಸಿಡಿಲು ಅಪ್ಪಳಿಸಿದ್ದು, ಮೇಲ್ಭಾಗದಿಂದ ಕೆಳಭಾಗದವರಗೆ ಹಾನಿಯಾಗಿದೆ. ದೇವಸ್ಥಾನದಲ್ಲಿ ಮಲಗಿದ್ದ ವೃದ್ಧೆ ಅಪಾಯದಿಂದ ಪಾರಾಗಿದ್ದಾರೆ.

ತುಮಕೂರು: ತುಮಕೂರು ‌ಜಿಲ್ಲೆಯಲ್ಲಿ‌ ತಡರಾತ್ರಿ ಮಳೆ ಅಬ್ಬರಕ್ಕೆ ಹೆಚ್ ಬೈರಾಪುರ ಗ್ರಾಮದ ಎರಡು ಸೇತುವೆಗಳು ಸಂಪೂರ್ಣ ಜಲಾವೃತವಾಗಿವೆ. ತುಮಕೂರು ಜಿಲ್ಲೆಯ ತಿಪಟೂರು ತಾಲೂಕಿನ ಹೆಚ್ ಬೈರಾಪುರ ಗ್ರಾಮದ ಸೇತುವೆಗಳ ಮೇಲೆ ನೀರು ಹರಿಯುತ್ತಿದ್ದು, ವಾಹನ ಸವಾರರು ಪರದಾಡಿದರು.

rain news tumkur

ತುಮಕೂರು ಜಿಲ್ಲೆಯ ಶಿರಾ ನಗರದ 18ನೇ ವಾರ್ಡ್‌ನ ಕೆಲ ಮನೆ ಹಾಗೂ ವಾಣಿಜ್ಯ ಮಳಿಗೆಗಳಿಗೆ ನೀರು ನುಗ್ಗಿದೆ. ವಾಣಿಜ್ಯ ಮಳಿಗೆ ಹಾಗೂ ಮನೆಗಳಿಗೆ ನೀರು ನುಗ್ಗಿದ್ದು, ಮನೆಯೊಳಗಿದ್ದ ಅಪಾರ ಪ್ರಮಾಣದ ಧವಸ ಧಾನ್ಯ, ಪೀಠೋಪಕರಣಗಳು ನೀರು ಪಾಲಾಗಿವೆ. ಶಿರಾ ನಗರಸಭೆ ಅಧಿಕಾರಿಗಳ ಹಾಗೂ ಜನಪ್ರತಿನಿಧಿಗಳ ವಿರುದ್ಧ 18ನೇ ವಾರ್ಡ್ ಜನ ಆಕ್ರೋಶಿಸಿದ್ದಾರೆ.

ಮಗುಚಿದ ಬೋಟ್‌, ಪ್ರಯಾಣಿಕರ ರಕ್ಷಣೆ

ಕಾರವಾರ: ಉತ್ತರಕನ್ನಡ ಜಿಲ್ಲೆಯ ಕುಮಟಾ ತಾಲೂಕಿನ ತದಡಿ ಗ್ರಾಮದ ಸಮೀಪ ಪ್ರವಾಸಿ ಬೋಟ್ ಪಲ್ಟಿಯಾಗಿದ್ದು, ಸಮುದ್ರದ ಹಿನ್ನೀರಿನಲ್ಲಿ ಮಗುಚಿದ ಪ್ರವಾಸಿಗರ ಬೋಟ್‌ನಿಂದ 40 ಪ್ರವಾಸಿಗರನ್ನು ರಕ್ಷಣೆ ಮಾಡಲಾಯಿತು.

Tourist boat capsizes

ಅಳಿವೆ ಸಂಗಮ ಸ್ಥಳದಿಂದ ತುಸು ದೂರದಲ್ಲಿ ಘಟನೆ ನಡೆದಿದ್ದು, ಕರಾವಳಿ ಕಾವಲು ಪಡೆ ಮತ್ತು ಸ್ಥಳೀಯ ರಕ್ಷಣಾ ತಂಡದಿಂದ ರಕ್ಷಣಾ ಕಾರ್ಯಾಚರಣೆ ನಡೆಯಿತು. ಮೂಡಂಗಿಯ ಗಣೇಶ, ರಮೇಶ ಎನ್ನುವವರಿಗೆ ಸೇರಿದ ಪ್ರವಾಸಿ ಬೋಟ್ ಇದಾಗಿದ್ದು, ನಿಗದಿಗಿಂತ ಹೆಚ್ಚಿನ ಜನರನ್ನು ದೋಣಿಯಲ್ಲಿ ಹತ್ತಿಸಿಕೊಂಡಿದ್ದರಿಂದ ಮಗುಚಿದೆ. ಗೋಕರ್ಣ ಪೊಲೀಸ್ ಠಾಣಾ ವ್ಯಾಪ್ತಿಯಲ್ಲಿ ಘಟನೆ ನಡೆದಿದೆ.

ಇದನ್ನೂ ಓದಿ: Karnataka Weather : ವರ್ಷಾಘಾತಕ್ಕೆ ಜನ ಸುಸ್ತು; ಮಳೆಯಾಟಕ್ಕೆ ಬಿರುಗಾಳಿ ಸಾಥ್‌

Continue Reading

ಮಳೆ

Karnataka Weather : ವರ್ಷಾಘಾತಕ್ಕೆ ಜನ ಸುಸ್ತು; ಮಳೆಯಾಟಕ್ಕೆ ಬಿರುಗಾಳಿ ಸಾಥ್‌

Bengaluru Rain : ಬೆಂಗಳೂರು ಸೇರಿದಂತೆ ರಾಜ್ಯಾದ್ಯಂತ ಗುಡುಗು ಸಹಿತ ಬಿರುಗಾಳಿ ಮಳೆಯಾಗುವ (Heavy Rain alert) ನಿರೀಕ್ಷೆ ಇದೆ. ಜತೆಗೆ ಬಿಸಿಲಿನಿಂದ ತತ್ತರಿಸಿದ್ದ ಒಳನಾಡಿನಲ್ಲಿ ಗರಿಷ್ಠ ತಾಪಮಾನವು ಇಳಿಕೆ ಆಗಲಿದೆ ಎಂದು ಹವಾಮಾನ ಇಲಾಖೆ ಮುನ್ಸೂಚನೆಯನ್ನು (Karnataka weather Forecast) ನೀಡಿದೆ.

VISTARANEWS.COM


on

By

Karnataka Weather Forecast
Koo

ಬೆಂಗಳೂರು: ಮುಂದಿನ 5 ದಿನಗಳು ರಾಜ್ಯದ ಒಳನಾಡು ಭಾಗದಲ್ಲಿ ಗರಿಷ್ಠ ತಾಪಮಾನವು 2-4 ಡಿಗ್ರಿ ಸೆಲ್ಸಿಯಸ್ ಕಡಿಮೆಯಾಗುವ ಸಾಧ್ಯತೆ ಇದೆ. ಇದರಿಂದಾಗಿ ಬೇಸಿಗೆಯಿಂದ ತತ್ತರಿಸಿದ್ದವರಿಗೆ ವಾತಾವರಣವು ತಂಪಾಗಿ ಇರಲಿದೆ. ಮುಂದಿನ 24 ಗಂಟೆಯಲ್ಲಿ ಬಿರುಗಾಳಿಯೊಂದಿಗೆ ಭಾರಿ ಮಳೆಯಾಗುವ (Rain news) ಸಾಧ್ಯತೆ ಇದೆ ಎಂದು ಹವಾಮಾನ ಇಲಾಖೆ (Karnataka Weather Forecast) ಮುನ್ಸೂಚನೆಯನ್ನು ನೀಡಿದೆ. ಪ್ರತ್ಯೇಕ ಕಡೆಗಳಲ್ಲಿ ಗುಡುಗು, ಸಿಡಿಲು ಸಂಭವಿಸಲಿದೆ.

ರಾಜಧಾನಿ ಬೆಂಗಳೂರಲ್ಲಿ ಸಾಮಾನ್ಯವಾಗಿ ಮೋಡ ಕವಿದ ವಾತಾವರಣವಿರುತ್ತದೆ. ಸಾಧಾರಣ ಮಳೆಯೊಂದಿಗೆ ಗುಡುಗು ಸಹಿತ ಕೆಲವೆಡೆ ಭಾರಿ ಮಳೆಯಾಗುವ ಸಾಧ್ಯತೆ ಇದೆ. ಗರಿಷ್ಠ ಮತ್ತು ಕನಿಷ್ಠ ತಾಪಮಾನವು ಕ್ರಮವಾಗಿ 29 ಮತ್ತು 22 ಡಿ.ಸೆ ಇರಲಿದೆ.

ಇದನ್ನೂ ಓದಿ: Karnataka Rain : ವಿಜಯನಗರದಲ್ಲಿ ಸಿಡಿಲಿಗೆ ಜಾನುವಾರು ಬಲಿ; ಬೆಂಗಳೂರು ಸೇರಿ ಹಲವೆಡೆ ಭಾರಿ ಮಳೆ

ಕರಾವಳಿಯಲ್ಲಿ ದಕ್ಷಿಣ ಕನ್ನಡ, ಉಡುಪಿ ಜಿಲ್ಲೆಗಳಲ್ಲಿ ಪ್ರತ್ಯೇಕ ಸ್ಥಳಗಳಲ್ಲಿ ಭಾರೀ ಮಳೆಯ ಎಚ್ಚರಿಕೆಯನ್ನು ನೀಡಲಾಗಿದೆ. ಮಲೆನಾಡಿನ ಕೊಡಗು, ಶಿವಮೊಗ್ಗ, ಹಾಸನ, ಚಿಕ್ಕಮಗಳೂರು ಹಾಗೂ ದಕ್ಷಿಣ ಒಳನಾಡಿನ ಮೈಸೂರು, ಚಾಮರಾಜನಗರದಲ್ಲಿ ಗಾಳಿಯು ಗಂಟೆಗೆ 40-50 ಕಿ.ಮೀ ವೇಗದಲ್ಲಿ ಬೀಸಲಿದ್ದು, ಭಾರೀ ಮಳೆಯೊಂದಿಗೆ ಗುಡುಗು ಇರಲಿದೆ.

ಜತೆಗೆ ಮಂಡ್ಯ, ರಾಮನಗರ, ದಾವಣಗೆರೆ ಜಿಲ್ಲೆಗಳಲ್ಲಿ ಗಾಳಿ ಸಹಿತ ಮಳೆಯಾಗಲಿದೆ. ಕರಾವಳಿಯ ಉತ್ತರ ಕನ್ನಡ ಜಿಲ್ಲೆಯಲ್ಲಿ ಗುಡುಗು ಸಹಿತ ಮಳೆಯಾಗುವ ನಿರೀಕ್ಷೆ ಇದೆ. ಬಾಗಲಕೋಟೆ, ಬೆಳಗಾವಿ, ಧಾರವಾಡ, ಗದಗ, ಹಾವೇರಿ, ಕೊಪ್ಪಳ, ವಿಜಯಪುರ, ಬಳ್ಳಾರಿ, ಬೆಂಗಳೂರು ಗ್ರಾಮಾಂತರ, ಬೆಂಗಳೂರು ನಗರ, ಚಿಕ್ಕಬಳ್ಳಾಪುರ, ಕೋಲಾರ, ತುಮಕೂರು, ವಿಜಯನಗರ ಸೇರಿದಂತೆ ಚಿತ್ರದುರ್ಗದ ಅನೇಕ ಸ್ಥಳಗಳಲ್ಲಿ ಗುಡುಗು ಸಹಿತ ಗಾಳಿಯೊಂದಿಗೆ (40-50 kmph) ಸಾಧಾರಣ ಮಳೆಯಾಗುವ ಸಾಧ್ಯತೆಯಿದೆ.

ಈ ಸಂಗತಿಯ ಕುರಿತು ನಿಮ್ಮ ಅನಿಸಿಕೆ ಏನು? ಕಾಮೆಂಟ್ ಮೂಲಕ ತಿಳಿಸಿ

Continue Reading

ಮಳೆ

Karnataka Rain : ಒಂದೇ ಮಳೆಗೆ ಹೊಳೆಯಂತಾದ ಬೆಂಗಳೂರು ರಸ್ತೆಗಳು! ಕಳಸದಲ್ಲೂ ಮುಂದುವರಿದ ಅಬ್ಬರ

Karnataka Rain : ಒಂದೇ ಮಳೆಗೆ ಬೆಂಗಳೂರಿನ ಹಲವು ಏರಿಯಾಗಳು ಸಣ್ಣ ದ್ವೀಪದಂತಾಗಿದೆ. ಚಿಕ್ಕಮಗಳೂರಿನ ಕಳಸದಲ್ಲೂ ಮಳೆಯು ಅಬ್ಬರಿಸುತ್ತಿದೆ. ಹಲವೆಡೆ ಮಳೆಯಿಂದ ಅವಘಡ ಮುಂದುವರಿದಿದೆ.

VISTARANEWS.COM


on

By

Karnataka Rain
Koo

ಬೆಂಗಳೂರು/ಚಿಕ್ಕಮಗಳೂರು: ಬೆಂಗಳೂರಿನಲ್ಲಿ ಗಂಟೆ ಕಾಲ ಸುರಿದ ಮಳೆಗೆ (Karnataka Rain) ರಸ್ತೆಗಳೆಲ್ಲವೂ ಹೊಳೆಯಂತಾಗಿದೆ. ರಾಜಕಾಲುವೆಯಿಂದ ಯಲಹಂಕ ನಿವಾಸಿಗಳಿಗೆ ನಿತ್ಯ ಸಂಕಷ್ಟ ಎದುರಿಸುವಂತಾಗಿದೆ. ನಿನ್ನೆ ಶನಿವಾರ ರಾತ್ರಿ ಸುರಿದ ಮಳೆಗೆ ಇಡೀ ಏರಿಯಾ ಜಲಾವೃತಗೊಂಡಿದೆ.

karnataka rain

ಯಲಹಂಕದ ನಾರ್ಥ್‌ ಹುಡ್ ಅಪಾರ್ಟ್‌ಮೆಂಟ್ ಸುತ್ತಮುತ್ತ ನೀರು ತುಂಬಿ ಅವಾಂತರವೇ ಸೃಷ್ಟಿಯಾಗಿದೆ. ಕಳೆದ ಒಂದು ವಾರದಿಂದ ರಾಜಕಾಲುವೆಯಿಂದ ನೀರು ಹರಿಯುತ್ತಿದೆ. ಸ್ಟಾರ್ಮ್ ವಾಟರ್ ಡ್ರೇನ್ ಓಪನ್ ಬಿಟ್ಟಿರುವುದರಿಂದ ಈ ಸಮಸ್ಯೆ ಆಗುತ್ತಿದೆ ಎಂದು ಸ್ಥಳೀಯರು ಆರೋಪಿಸಿದ್ದಾರೆ.

ಇನ್ನೂ ರಾಜಕಾಲುವೆ ನೀರಿನ ವಾಸನೆಗೆ ನಿವಾಸಿಗಳು ಕಂಗಾಲಾಗಿದ್ದಾರೆ. ಗಬ್ಬು ವಾಸನೆ ತಾಳಲಾರದೇ ಕೆಲ ನಿವಾಸಿಗಳು ಮನೆ ಖಾಲಿ ಮಾಡಿದ್ದಾರೆ. ರಾತ್ರಿಯಿಂದಲೂ ಮೋಟಾರ್‌ ಮೂಲಕ ನೀರು ಹೊರಹಾಕುತ್ತಿದ್ದಾರೆ. ಸುತ್ತಮುತ್ತಲಿನ ಐದಾರು ಅಪಾರ್ಟ್ ಮೆಂಟ್ ನಿವಾಸಿಗಳಿಗೆ ಸಂಕಷ್ಟ ಎದುರಾಗಿದೆ. ವಾರದ ಹಿಂದೆ ಬಿಬಿಎಂಪಿಗೆ ಪತ್ರ ಬರೆದರೂ ಯಾವುದೇ ಪ್ರಯೋಜವಿಲ್ಲ ಎಂದು ಕಿಡಿಕಾರಿದ್ದಾರೆ. ರಾಜಕಾಲುವೆಯಿಂದ ನೀರು ತುಂಬಿ 22 ಮನೆಗಳ ನಿವಾಸಿಗಳು ಪರದಾಡುತ್ತಿದ್ದಾರೆ. ಪಕ್ಕದಲ್ಲಿರುವ ಪುಟ್ಟೇನಹಳ್ಳಿ ಕೆರೆಗೆ ನೀರು ಹರಿಯದೇ ಇರುವುದರಿಂದ ಆ ನೀರು ಕೂಡ ಸೇರುತ್ತಿದೆ. ರಾಜಕಾಲುವೆ, ಮಳೆ ನೀರು ಸೇರಿ ಇಡೀ ಏರಿಯಾ ಕೆರೆಯಂತಾಗಿದೆ.

ಇದನ್ನೂ ಓದಿ: Karnataka Rain: ಧಾರಾಕಾರ ಮಳೆಗೆ ಕಾಂಪೌಂಡ್ ಕುಸಿದು 4 ಬೈಕ್‌ಗಳು ಜಖಂ; ಮದುವೆ ಮಂಟಪಕ್ಕೆ ನುಗ್ಗಿದ ನೀರು‌

ಕಳಸ ತಾಲೂಕಿನಾದ್ಯಂತ ಧಾರಾಕಾರ ಮಳೆ

ಕಾಫಿನಾಡು ಮಲೆನಾಡಲ್ಲಿ ಮಳೆ ಅಬ್ಬರ ಮುಂದುವರಿದಿದೆ. ಭಾರೀ ಗಾಳಿ-ಮಳೆಗೆ ಜನಜೀವನ ಅಸ್ತವ್ಯಸ್ತವಾಗಿದೆ. ಕಳಸ ತಾಲೂಕಿನಾದ್ಯಂತ ಧಾರಾಕಾರ ಮಳೆಗೆ ಕಳಸ ದೇವಸ್ಥಾನದ ಎತ್ತರದ ಪ್ರದೇಶದಿಂದ ನೀರು ಹರಿಯುತ್ತಿದೆ. ದಕ್ಷಿಣ ಕಾಶಿ ಕಳಸೇಶ್ವರ ಸ್ವಾಮಿ ದೇವಸ್ಥಾನದ ಮೆಟ್ಟಿಲು ಮೇಲಿಂದ ನೀರು ಹರಿಯುತ್ತಿದೆ. ಇತ್ತ ಮೆಟ್ಟಿಲ ಮೇಲೆ ನಿಂತು ಮಳೆ ನೀರಲ್ಲಿ ಮಕ್ಕಳು ಆಟವಾಡುತ್ತಿರುವ ದೃಶ್ಯ ಕಂಡು ಬಂತು. ಗಾಳಿ-ಮಳೆಗೆ ಮರ ಬಿದ್ದು ಗ್ರಾಮೀಣ ಭಾಗದಲ್ಲಿ ವಿದ್ಯುತ್ ಸಂಪರ್ಕ ಕಡಿತಗೊಂಡಿದೆ. ಕುದುರೆಮುಖ ಘಟ್ಟ ಪ್ರದೇಶದಲ್ಲಿ ಭಾರೀ ಮಳೆಯಾಗುತ್ತಿದೆ. ಭದ್ರಾ ನದಿ ಒಳಹರಿವಿನಲ್ಲಿ ನೀರಿನ ಪ್ರಮಾಣ ಹೆಚ್ಚಳಗೊಂಡಿದೆ.

karnataka rain

ಕೊಪ್ಪಳದಲ್ಲೂ ಮುಂಗಾರು ಪೂರ್ವ ಮಳೆ

ಕೊಪ್ಪಳದಲ್ಲಿ ಭಾನುವಾರ ಮುಂಗಾರು ಪೂರ್ವ ಮಳೆ ಆರಂಭವಾಗಿದೆ. ಕೊಪ್ಪಳ ಜಿಲ್ಲೆಯಲ್ಲಿ ಮೂರು ದಿನಗಳಿಂದ ಆಗಾಗ ಮಳೆ ಸುರಿಯುತ್ತಿದೆ. ನಿನ್ನೆ ಶನಿವಾರ ಸಂಜೆ ಸುರಿದಿದ್ದ ಮಳೆಯು ಭಾನುವಾರ ಬೆಳಗಿನವರೆಗೆ ಬಿಡುವು ಕೊಟ್ಟಿತ್ತು. ಮಧ್ಯಾಹ್ನದ ನಂತರ ಧೋ ಎಂದು ಗುಡುಗು ಸಹಿತ ಮಳೆ ಸುರಿಯುತ್ತಿದೆ.

ಈ ಸಂಗತಿಯ ಕುರಿತು ನಿಮ್ಮ ಅನಿಸಿಕೆ ಏನು? ಕಾಮೆಂಟ್ ಮೂಲಕ ತಿಳಿಸಿ

Continue Reading
Advertisement
KKR vs SRH
ಕ್ರೀಡೆ9 mins ago

KKR vs SRH: ನಾಳೆ ಮೊದಲ ಕ್ವಾಲಿಫೈಯರ್‌ ಪಂದ್ಯ; ಗೆದ್ದವರಿಗೆ ನೇರ ಫೈನಲ್‌ ಸೋತವರಿಗೆ ಇನ್ನೊಂದು ಅವಕಾಶ

Air Crashes
ವಿದೇಶ11 mins ago

Air Crashes: ವಿಮಾನ ಅಪಘಾತದಲ್ಲಿ ದಾರುಣವಾಗಿ ಮೃತಪಟ್ಟ 10 ಪ್ರಭಾವಿ ರಾಜಕಾರಣಿಗಳಿವರು

Phone Tapping
ಕರ್ನಾಟಕ22 mins ago

Phone Tapping: ಎಚ್‌ಡಿಕೆ ಫೋನ್‌ ಟ್ಯಾಪ್‌ ಮಾಡೋಕೆ, ಅವರೇನು ಟೆರರಿಸ್ಟಾ? ಎಂದ ಡಿಕೆಶಿ

Star Fashion
ಫ್ಯಾಷನ್23 mins ago

Star Fashion: ಮಾಲಾಶ್ರೀ ಮಗಳ ಬಿಗ್‌ ಬ್ಲ್ಯಾಕ್‌ ಜುಮ್ಕಾ ಲವ್‌!

Benjamin Netanyhu
ವಿದೇಶ25 mins ago

ಇಸ್ರೇಲ್‌ ಪಿಎಂ ಬೆಂಜಮಿನ್‌ ನೆತನ್ಯಾಹು, ಹಮಾಸ್‌ ಉಗ್ರರಿಗೆ ಜಾಗತಿಕ ಕೋರ್ಟ್‌ ಅರೆಸ್ಟ್‌ ವಾರೆಂಟ್! ಶೀಘ್ರ ಬಂಧನ?

Legislative Council Election dates fixedVoting on June 13
ರಾಜಕೀಯ28 mins ago

Legislative Council Election: ವಿಧಾನ ಪರಿಷತ್‌ನ 11 ಸ್ಥಾನಗಳಿಗೆ ಚುನಾವಣೆ ದಿನಾಂಕ ಫಿಕ್ಸ್;‌ ಜೂನ್‌ 13ಕ್ಕೆ ಮತದಾನ

Covaxin Safety
ದೇಶ1 hour ago

Covaxin Safety: ಕೊವ್ಯಾಕ್ಸಿನ್‌ನಿಂದ ಅಡ್ಡ ಪರಿಣಾಮ ಎಂದು ಬನಾರಸ್‌ ವಿವಿ ವರದಿ; ವೈದ್ಯ ಸಂಶೋಧನಾ ಸಂಸ್ಥೆ ಆಕ್ಷೇಪ

Food department deletes name from ration card list even though it is alive
ವಿಜಯನಗರ1 hour ago

Food Department : ಜೀವಂತ ಇದ್ದವಳನ್ನು ಸತ್ತಿದ್ದಾಗಿ ಘೋಷಿಸಿದ ಆಹಾರ ಇಲಾಖೆ; ರೇಷನ್‌ ಕಾರ್ಡ್‌ನಿಂದಲೇ ಹೆಸರು ಡಿಲೀಟ್‌

History Of Ice Cream
ಆಹಾರ/ಅಡುಗೆ1 hour ago

History Of Ice Cream: ಎಲ್ಲರ ನೆಚ್ಚಿನ ಐಸ್‌ಕ್ರೀಮ್‌ ಹುಟ್ಟಿದ್ದು ಹೇಗೆ?

IPL 2024
ಕ್ರೀಡೆ1 hour ago

IPL 2024: ಮೋದಿ ಸ್ಟೇಡಿಯಂನಲ್ಲಿ ನಡೆಯುವ ಐಪಿಎಲ್​ ಪ್ಲೇ ಆಫ್​ ಪಂದ್ಯಕ್ಕೆ ಐಸಿಸ್‌ ಉಗ್ರರ ಕಾಟ; ಪಂದ್ಯಕ್ಕೂ ಮುನ್ನ ನಾಲ್ವರ ಬಂಧನ

Sharmitha Gowda in bikini
ಕಿರುತೆರೆ8 months ago

Geetha Serial Kannada: ನಿದ್ದೆ ಕದ್ದ ಚೋರಿ! ನಟಿ `ಭಾನುಮತಿ’ ಹಾಟ್‌ ಪೋಟೊಗಳಿಗೆ ಫ್ಯಾನ್ಸ್ ಫುಲ್ ಫಿದಾ

Kannada Serials
ಕಿರುತೆರೆ7 months ago

Kannada Serials TRP: 2ನೇ ಸ್ಥಾನದಲ್ಲಿ 2 ಧಾರಾವಾಹಿಗಳು; ಟಿಆರ್‌ಪಿ ರೇಸ್‌ನಲ್ಲಿಲ್ಲ ಭಾಗ್ಯಲಕ್ಷ್ಮೀ!

Bigg Boss- Saregamapa 20 average TRP
ಕಿರುತೆರೆ7 months ago

Kannada Serials TRP: ಏಳನೇ ಸ್ಥಾನಕ್ಕೆ ʻಅಮೃತಧಾರೆʼ ಕುಸಿತ; ಬಿಗ್‌ ಬಾಸ್‌-ಸರಿಗಮಪ ಟಿಆರ್‌ಪಿ ಎಷ್ಟು?

galipata neetu
ಕಿರುತೆರೆ6 months ago

Kanyadana Serial: ಕಿರುತೆರೆಗೆ ಮತ್ತೆ ಎಂಟ್ರಿ ಕೊಟ್ಟ ʻಗಾಳಿಪಟʼ ಖ್ಯಾತಿಯ ʻನೀತುʼ!

Kannada Serials
ಕಿರುತೆರೆ8 months ago

Kannada Serials TRP: ನಾಲ್ಕನೇ ಸ್ಥಾನಕ್ಕೆ ಕುಸಿತ ಕಂಡ ʻಸೀತಾ ರಾಮʼ; ಟಿಆರ್‌ಪಿ ರೇಸ್‌ಗೆ ʻಭಾಗ್ಯಲಕ್ಷ್ಮಿʼ ಬ್ಯಾಕ್‌!

Kannada Serials
ಕಿರುತೆರೆ8 months ago

Kannada Serials TRP: ಟಿಆರ್‌ಪಿಯಲ್ಲಿ ʻಭಾಗ್ಯಲಕ್ಷ್ಮೀʼ ಹವಾ; ʻಪುಟ್ಟಕ್ಕನ ಮಕ್ಕಳುʼ ಧಾರಾವಾಹಿಗೆ ಸಂಕಷ್ಟ!

Bigg Boss' dominates TRP; Sita Rama fell to the sixth position
ಕಿರುತೆರೆ7 months ago

Kannada Serials TRP: ಟಿಆರ್‌ಪಿಯಲ್ಲಿ ʻಬಿಗ್ ಬಾಸ್ʼದೇ ಮೇಲುಗೈ; 6ನೇ ಸ್ಥಾನಕ್ಕೆ ಕುಸಿದ ʻಸೀತಾ ರಾಮʼ

geetha serial Dhanush gowda engagement
ಕಿರುತೆರೆ5 months ago

Dhanush Gowda: ಗೀತಾ ಧಾರಾವಾಹಿ ನಟನ ನಿಶ್ಚಿತಾರ್ಥ; ಭವ್ಯಾಳ ಕಮೆಂಟ್‌ ಬಾಕ್ಸ್‌ ಆಫ್‌!

varun
ಕಿರುತೆರೆ6 months ago

Brindavana Serial: ʼಬೃಂದಾವನʼ ಧಾರಾವಾಹಿಯಲ್ಲಿ ದೊಡ್ಡ ಟ್ವಿಸ್ಟ್‌; ಪ್ರಮುಖ ಪಾತ್ರಧಾರಿಯೇ ಬದಲು

Kannada Serials
ಕಿರುತೆರೆ8 months ago

Kannada Serials TRP: ಟಿಆರ್‌ಪಿಯಲ್ಲಿ ಏರಿಕೆ ಕಂಡ ʻಅಮೃತಧಾರೆʼ; ʻಗಟ್ಟಿಮೇಳʼಕ್ಕೆ ನಾಲ್ಕನೇ ಸ್ಥಾನ!

Karnataka Rain
ಮಳೆ5 hours ago

Karnataka Rain : ಬಂಗಾಳ ಕೊಲ್ಲಿಯಲ್ಲಿ ವಾಯುಭಾರ ಕುಸಿತ; ಸಮುದ್ರಕ್ಕಿಳಿಯದಂತೆ ಮೀನುಗಾರರಿಗೆ ಎಚ್ಚರಿಕೆ

Karnataka Rain
ಮಳೆ1 day ago

Karnataka Rain : ಒಂದೇ ಮಳೆಗೆ ಹೊಳೆಯಂತಾದ ಬೆಂಗಳೂರು ರಸ್ತೆಗಳು! ಕಳಸದಲ್ಲೂ ಮುಂದುವರಿದ ಅಬ್ಬರ

Karnataka rain
ಮಳೆ1 day ago

Karnataka Rain : ವಿಜಯನಗರದಲ್ಲಿ ಸಿಡಿಲಿಗೆ ಜಾನುವಾರು ಬಲಿ; ಬೆಂಗಳೂರು ಸೇರಿ ಹಲವೆಡೆ ಭಾರಿ ಮಳೆ

Karnataka Rain
ಮಳೆ1 day ago

Karnataka Rain: ಧಾರಾಕಾರ ಮಳೆಗೆ ಕಾಂಪೌಂಡ್ ಕುಸಿದು 4 ಬೈಕ್‌ಗಳು ಜಖಂ; ಮದುವೆ ಮಂಟಪಕ್ಕೆ ನುಗ್ಗಿದ ನೀರು‌

Prajwal Revanna Case JDS calls CD Shivakumar pen drive gang
ರಾಜಕೀಯ3 days ago

Prajwal Revanna Case: CD ಶಿವಕುಮಾರ್ ಪೆನ್ ಡ್ರೈವ್ ಗ್ಯಾಂಗ್ ಎಂದ ಕುಟುಕಿದ ಜೆಡಿಎಸ್‌!

Karnataka weather Forecast
ಮಳೆ3 days ago

Karnataka Weather : ಮೈಸೂರು, ಮಂಡ್ಯ ಸೇರಿ ಈ 7 ಜಿಲ್ಲೆಗಳಲ್ಲಿ ವ್ಯಾಪಕ ಮಳೆ ಸಂಭವ

Dina Bhavishya
ಭವಿಷ್ಯ4 days ago

Dina Bhavishya : ಈ ರಾಶಿಯ ಪ್ರೇಮಿಗಳಿಗೆ ಮನೆಯಿಂದ ಸಿಗುತ್ತೆ ಗ್ರೀನ್‌ ಸಿಗ್ನಲ್‌

Karnataka Weather Forecast
ಮಳೆ4 days ago

Karnataka Weather : ಭಾರಿ ಮಳೆಗೆ ಕೊಟ್ಟೂರು ಬಸ್ ಸ್ಟ್ಯಾಂಡ್‌ ಜಲಾವೃತ; ‌ ತಾಯಿ-ಮಗ ಗ್ರೇಟ್‌ ಎಸ್ಕೇಪ್‌

Drowned in water
ಹಾಸನ4 days ago

Drowned in water : ಕೆರೆಯಲ್ಲಿ ಈಜಲು ಹೋದ ನಾಲ್ವರು ನೀರುಪಾಲು; ಓರ್ವ ಬಾಲಕ ಪಾರು

Suspicious Case
ಬೆಂಗಳೂರು4 days ago

Suspicious Case : ಬಾತ್‌ ರೂಂನಲ್ಲಿತ್ತು ಕಾಲೇಜು ಹುಡುಗಿ ಡೆಡ್‌ ಬಾಡಿ; ಕುತ್ತಿಗೆ ಕೊಯ್ದು ಸಾಯಿಸಿದವರು ಯಾರು?

ಟ್ರೆಂಡಿಂಗ್‌