Rameshwaram Cafe : ರಾಮೇಶ್ವರಂ ಕೆಫೆ ಮಾಲಕಿ ದಿವ್ಯಾ ರಾಘವೇಂದ್ರ ರಾವ್‌ ಯಾರು? ಅರ್ಚಕರ ಮಗಳ ಅಡ್ವೆಂಚರ್‌! - Vistara News

ಆಹಾರ/ಅಡುಗೆ

Rameshwaram Cafe : ರಾಮೇಶ್ವರಂ ಕೆಫೆ ಮಾಲಕಿ ದಿವ್ಯಾ ರಾಘವೇಂದ್ರ ರಾವ್‌ ಯಾರು? ಅರ್ಚಕರ ಮಗಳ ಅಡ್ವೆಂಚರ್‌!

Rameshwaram Cafe : ಬಾಂಬ್‌ ಸ್ಫೋಟದೊಂದಿಗೆ ಸುದ್ದಿಯಾದ ರಾಮೇಶ್ವರಂ ಕೆಫೆ ಅದರಾಚೆಗೂ ದೇಶಾದ್ಯಂತ ಫೇಮಸ್‌. ಯಾಕೆಂದರೆ ಅದರ ಆರಂಭ ಮತ್ತು ಬೆಳವಣಿಗೆ ಒಂದು ದೊಡ್ಡ ಸಕ್ಸಸ್‌ ಸ್ಟೋರಿ.

VISTARANEWS.COM


on

Rameshwaram Cafe Divya Raghavendra Rao main
ಮಹತ್ವದ, ಕುತೂಹಲಕರ ಸುದ್ದಿಗಾಗಿ ಫಾಲೊ ಮಾಡಿ
Koo

ಬೆಂಗಳೂರು: ಕೇವಲ ಮೂರು ವರ್ಷಗಳಲ್ಲಿ ಇಡೀ ದೇಶ ತನ್ನ ಕಡೆಗೆ ತಿರುಗಿ ನೋಡುವಂತೆ ಮಾಡಿದ ಫುಡ್‌ ಜಾಯಿಂಟ್‌ ಅಂದರೆ ಅದು ರಾಮೇಶ್ವರಂ ಕೆಫೆ (Rameshwaram Cafe). ಈಗ ಬಾಂಬ್‌ ಸ್ಫೋಟದ (Blast in Bengaluru) ಮೂಲಕ ಸುದ್ದಿಯಲ್ಲಿರುವ ಈ ಜನಪ್ರಿಯ ಕೆಫೆ ಅದಕ್ಕಿಂತ ಮೋದಲೇ ತನ್ನ ವಿಶಿಷ್ಟ ಮತ್ತು ರುಚಿಕರ ಖಾದ್ಯ ವಿಶೇಷಗಳಿಗಾಗಿ (Special and tasty Cuisines) ಜನರ ಮನಸ್ಸಿನಲ್ಲಿ ಅಚ್ಚೊತ್ತಿತ್ತು. ಮೂರು ವರ್ಷಗಳ ಹಿಂದೆ ಸಣ್ಣ ಜಾಗದಲ್ಲಿ ಆರಂಭಗೊಂಡ ರಾಮೇಶ್ವರಂ ಕೆಫೆಯ ನಾಲ್ಕು ಜಾಯಿಂಟ್‌ಗಳು ಬೆಂಗಳೂರಿನಲ್ಲೇ ಇವೆ. ಉಳಿದಂತೆ ದುಬೈ ಮತ್ತು ಹೈದರಾಬಾದ್‌ನಲ್ಲೂ ಒಂದೊಂದು ಹೋಟೆಲ್‌ ಇದೆ.

ಇದೊಂದು ಹೋಟೆಲ್‌ ಎನ್ನುವುದಕ್ಕಿಂತಲೂ ವಿಶಿಷ್ಟ ರೀತಿಯ ಭೋಜನ ಶಾಲೆ ಎನ್ನಬಹುದು. ಇಲ್ಲಿನ ತುಪ್ಪವೇ ತುಂಬಿ ತುಳುಕುವ ದೋಸೆ, ಪೊಂಗಲ್‌ ಮತ್ತು ಎಲ್ಲ ಖಾದ್ಯಗಳು ಭಾರಿ ಫೇಮಸ್‌. ಬೆಳಗ್ಗಿನಿಂದ ರಾತ್ರಿವರೆಗೆ ಜನರಿಂದ ತುಂಬಿ ತುಳುಕುವ ಈ ಕೆಫೆಗಳಲ್ಲಿ ಆರಾಮವಾಗಿ ನೆಲದಲ್ಲೇ ಕುಳಿತು ತಿಂಡಿ ತಿನ್ನಬಹುದಾದಷ್ಟು ಸ್ವಚ್ಛತೆ ಇದೆ. ಇಲ್ಲಿ ಯಾವ ಮಟ್ಟದ ರಶ್‌ ಎಂದರೆ ಒಂದು ದೋಸೆ ತಿನ್ನಲು ಹೋದರೆ ಕನಿಷ್ಠ ಒಂದರ್ಧ ಗಂಟೆಯಾದರೂ ಕಾಯಲೇಬೇಕು.

Rameshwaram Cafe foods

ಹಾಗಿದ್ದರೆ ಈ ರಾಮೇಶ್ವರಂ ಕೆಫೆ ಯಾರದ್ದು? ಕೇವಲ ಮೂರೇ ವರ್ಷದಲ್ಲಿ ಇಷ್ಟೊಂದು ಜನಪ್ರಿಯತೆ ಪಡೆಯಲು ಕಾರಣವೇನು? ಅದರ ಮಾಲಕಿ ದಿವ್ಯಾ (Divya Raghavendra Rao) ಯಾರು? ಅವರ ಬೆನ್ನಿಗೆ ನಿಂತ ರಾಘವೇಂದ್ರ ರಾವ್‌ (Raghavendra Rao) ಯಾರು ಎಂಬೆಲ್ಲ ವಿಚಾರಗಳು ಎಲ್ಲರ ತಲೆಯಲ್ಲಿ ಓಡುತ್ತಿರುತ್ತವೆ.

Rameshwaram Cafe : ಇದು ದಿವ್ಯಾ ಮತ್ತು ರಾಘವೇಂದ್ರ ರಾವ್‌ ಅವರ ಕನಸಿನ ಕೂಸು

ಬೆಂಗಳೂರಿನ ದಿವ್ಯಾ ಮತ್ತು ರಾಘವೇಂದ್ರ ರಾವ್‌ ಎಂಬಿಬ್ಬರು ಸೇರಿ ಕಟ್ಟಿದ ಹೋಟೆಲ್‌ ಚೈನ್‌ ಇದು. ರಾಘವೇಂದ್ರ ರಾವ್‌ ಅವರು ಒಬ್ಬ ಮೆಕ್ಯಾನಿಕಲ್‌ ಎಂಜಿನಿಯರ್‌. ಅವರಿಗೆ ಅಡುಗೆ ಮೇಲೆ ಅಪಾರವಾದ ಆಸಕ್ತಿ. ಬೆಂಗಳೂರಿನವರೇ ಆದ ದಿವ್ಯಾ ಅವರು ಐಐಎಂ ಪದವೀಧರೆ ಮತ್ತು ಚಾರ್ಟರ್ಡ್‌ ಅಕೌಂಟೆಂಟ್‌. ಅವರಿಗೆ ಉದ್ಯಮದಲ್ಲಿ ಆಸಕ್ತಿ. ಪರಿಚಿತರೇ ಆಗಿದ್ದ ಅವರಿಬ್ಬರೂ ಮಾತನಾಡುತ್ತಿದ್ದಾಗ ಒಂದು ಹೋಟೆಲ್‌ ಕನಸು ಹುಟ್ಟಿತು.

Rameshwaram Cafe Divya Raghavendra Rao1

ತಾವು ಹೋಟೆಲ್‌ ಮಾಡಬೇಕು ಎಂದು ಯೋಚಿಸಿದಾಗ ಅವರ ತಲೆಗೆ ಬಂದಿದ್ದು ಎರಡು ವಿಷಯ. ಒಂದು ಇದು ದಕ್ಷಿಣ ಭಾರತದ ವಿಶೇಷ ಖಾದ್ಯಗಳ ತಾಣವಾಗಬೇಕು (South Indian Food joint) ಎಂಬ ಕನಸು ಕನಸು ಕಂಡರು. ಎರಡನೇಯದು ಹೋಟೆಲ್‌ಗೆ ಏನು ಹೆಸರು ಇಡುವುದು? ಈ ಯೋಚನೆ ಬಂದಾಗ ಅವರಿಗೆ ನೆನಪಾದದ್ದು ಇಬ್ಬರೂ ತುಂಬ ಅಭಿಮಾನದಿಂದ ಕಾಣುತ್ತಿದ್ದ ಡಾ. ಎಪಿಜೆ ಅಬ್ದುಲ್‌ ಕಲಾಂ. ಅಬ್ದುಲ್‌ ಕಲಾಂ ಅವರು ಹುಟ್ಟಿದ ಊರಾದ ರಾಮೇಶ್ವರಂ ಅನ್ನೇ ತಮ್ಮ ಹೋಟೆಲ್‌ಗೂ ಇಟ್ಟರು. ಅಲ್ಲಿಂದ ಶುರುವಾಯಿತು ಜೈತ್ರ ಯಾತ್ರೆ.

ದಕ್ಷಿಣ ಭಾರತದ ತಿನಿಸುಗಳನ್ನು ಜಾಗತಿಕ ಮಟ್ಟಕ್ಕೆ ಒಯ್ಯಬೇಕು ಎಂಬ ಕನಸಿನೊಂದಿಗೆ ಹುಟ್ಟಿದ ರಾಮೇಶ್ವರಂ ಕೆಫೆ ಇವತ್ತು ಬೆಂಗಳೂರಿನಲ್ಲಿ ನಾಲ್ಕು ಸೇರಿ ಒಟ್ಟು ಆರು ಔಟ್‌ಲೆಟ್‌ಗಳನ್ನು ಹೊಂದಿದೆ. ಇಲ್ಲಿನ ಖಾದ್ಯಗಳ ಬಗ್ಗೆ, ಅಲ್ಲಿನ ಆಂಬಿಯೆನ್ಸ್‌, ಶುಚಿ ರುಚಿಗಳ ಬಗ್ಗೆ ಜಗತ್ತಿನ ಬ್ಲಾಗರ್‌ಗಳು ಬರೆಯುತ್ತಿದ್ದಾರೆ. ಜನರು ಖುಷಿಯಿಂದ ತಿನ್ನುತ್ತಿದ್ದಾರೆ.

Rameshwaram Cafe Divya Raghavendra Rao3

ಓಪನ್‌ ಕಿಚನ್‌, ವಿಶಾಲ ಅಂಗಳ, ಮರದ ಕಟ್ಟೆಗಳು

ಯಾರು ಬೇಕಾದರೂ ಒಳಗೆ ಹೋಗಿ ನೋಡಬಹುದಾದ ಓಪನ್‌ ಕಿಚನ್‌, ಅದರ ಎದುರು ಒಂದು ರೌಂಡ್‌ ಕುಳಿತು ಯಾ ನಿಂತು ತಿನ್ನಬಹುದಾದ ಜಾಗ. ಅದರ ಹೊರಾವರಣದಲ್ಲಿ ನಾಲ್ಕೈದು ವಿಶಾಲ ಮೆಟ್ಟಿಲು, ನಂತರ ವಿಶಾಲವಾದ ಅಂಗಳದಂಥ ಜಾಗ. ಅಲ್ಲಲ್ಲಿ ಮರದ ಕಟ್ಟೆಗಳು.. ಇದು ಎಲ್ಲಾ ರಾಮೇಶ್ವರಂ ಕೆಫೆಗಳ ಸಾಮಾನ್ಯ ನೋಟ.

ಸುಮಾರು 700ಕ್ಕೂ ಅಧಿಕ ಸಿಬ್ಬಂದಿಗಳ ಪರಿವಾರವಾಗಿ ಬೆಳೆದಿದೆ ಅದು. 4.5 ಕೋಟಿ ರೂ ವ್ಯವಹಾರ ನಡೆಯುತ್ತಿದೆ. ಇದರ ಜನಪ್ರಿಯತೆ ಎಷ್ಟೆಂದರೆ ಮುಕೇಶ್‌ ಅಂಬಾನಿ ಅವರ ಪುತ್ರ ಅನಂತ್‌ ಅಂಬಾನಿಯವರ ವಿವಾಹ ಪೂರ್ವ ಸಂಭ್ರಮಾಚರಣೆಗೆ ದಕ್ಷಿಣ ಭಾರತದ ತಿನಿಸು ಪೂರೈಕೆ ಮಾಡುವ ಜವಾಬ್ದಾರಿ ರಾಮೇಶ್ವರಂ ಕೆಫೆಗೆ ಸಿಕ್ಕಿದೆ. ಹಲವಾರು ಬಾಲಿವುಡ್‌ ನಟರು ಇಲ್ಲಿಗೆ ಬರುತ್ತಾರೆ.

ಹಾಗಿದ್ದರೆ ಈಗ ಮೂಲ ಪ್ರಶ್ನೆಗೆ ಬರೋಣ ಈ ದಿವ್ಯಾ ಯಾರು?

ದಿವ್ಯಾ ರಾಘವೇಂದ್ರ ರಾವ್‌ ಅವರನ್ನು ನೋಡಿದರೆ ನೀವು ಇವರು ಇಡೀ ದೇಶದಲ್ಲೇ ಜನಪ್ರಿಯತೆ ಪಡೆದಿರುವ ರಾಮೇಶ್ವರಂ ಕೆಫೆಯ ಮಾಲಕಿ ಎಂದು ಹೇಳುವುದು ಸಾಧ್ಯವೇ ಇಲ್ಲ. ಅಷ್ಟೊಂದು ಸಿಂಪಲ್‌ ಆಗಿದ್ದಾರೆ. ಇವರು ಅಹಮದಾಬಾದ್‌ನ ಐಐಎಂನಲ್ಲಿ ಓದಿದವರು, ಚಾರ್ಟರ್ಡ್‌ ಅಕೌಂಟೆಂಟ್‌ ಅಂದರೆ ನಂಬಲು ಸಾಧ್ಯವೇ ಇಲ್ಲ. ಅಷ್ಟೊಂದು ಹೋಮ್ಲೀ ಆಗಿದ್ದಾರೆ… ಪಕ್ಕದ್ಮನೆ ಹುಡುಗಿಯ ಹಾಗೆ ಮುಗ್ಧ ಮುಗ್ಧ.

Rameshwaram Cafe Divya Raghavendra Rao3

ಇದಕ್ಕೆ ಒಂದು ಕಾರಣವೂ ಇದೆ. ಈಗ ಕೋಟಿ ಕೋಟಿ ವ್ಯವಹಾರ ನಡೆಸುವ ಇವರೇನೂ ಹುಟ್ಟಾ ಶ್ರೀಮಂತರಲ್ಲ. ಪುರೋಹಿತರ ಕುಟುಂಬದಲ್ಲಿ ಹುಟ್ಟಿದ ಇವರು ಪಕ್ಕಾ ಮಿಡಲ್‌ ಕ್ಲಾಸ್‌ ಹುಡುಗಿ. ಬಾಲ್ಯದಿಂದಲೇ ಬಡತನವನ್ನು ಕಂಡು ಉಂಡವರು. ಕಷ್ಟದಲ್ಲಿರುವ ಕುಟುಂಬಕ್ಕೆ ಆಸರೆಯಾಗಬೇಕು ಎಂದೇ ಕಷ್ಟಪಟ್ಟು ಓದಿದರು. ಅದಕ್ಕಾಗಿ ಸಿಎ ಮಾಡಿದರು.

ಪಿಯುಸಿ ಬಳಿಕ ಐಐಎಂ ಅಹಮದಾಬಾದ್‌ನಲ್ಲಿ ‘ಮ್ಯಾನೇಜ್‌ಮೆಂಟ್‌ ಮತ್ತು ಫೈನಾನ್ಸ್‌’ ಶಿಕ್ಷಣ ಪಡೆದರು. ಅಲ್ಲಿ ಅವರು ಫುಡ್ ಬಿಸಿನೆಸ್‌ ಬಗ್ಗೆ ಕೆಲವೊಂದು ಕೇಸ್‌ ಸ್ಟಡಿ ಮಾಡುತ್ತಿದ್ದಾಗ ನಾನ್ಯಾಕೆ ಹೋಟೆಲ್‌ ಉದ್ಯಮ ಮಾಡಬಾರದು ಎಂದು ಅನಿಸಿತು. ಹಾಗೆ ಶುರುವಾಗಿದ್ದೇ ಹೊಸ ಕನಸು.

ಇದನ್ನು ತಮ್ಮ ಪರಿಚಿತರೇ ಆಗಿದ್ದ, ಫುಡ್‌ ಅಂದರೆ ಅಂದರೆ ಜೀವ ಬಿಡುವ, ಮೆಕ್ಯಾನಿಕಲ್‌ ಎಂಜಿನಿಯರ್‌ ಆಗಿದ್ದರೂ ಆಹಾರ ತಯಾರಿಯಲ್ಲಿ ನಳ ಮಹಾರಾಜನೇ ಆಗಿದ್ದ ರಾಘವೇಂದ್ರ ರಾವ್‌ ಅವರಿಗೆ ಹೇಳಿದರು. ಅವರಿಬ್ಬರ ಪಾರ್ಟ್ನರ್‌ಶಿಪ್‌ನಲ್ಲಿ ಹೊಸ ವೆಂಚರ್‌ ತಲೆ ಎತ್ತಿತ್ತು. ಅಂದ ಹಾಗೆ ಜಗತ್ತು ಕೋವಿಡ್‌ನಿಂದ ಕಣ್ತೆರೆಯೋ ಗಳಿಗೆಯಲ್ಲಿ ರಾಮೇಶ್ವರಂ ಕೆಫೆ ಕೂಡಾ ಬೆಳಕು ಕಂಡಿತು.

ಇದನ್ನೂ ಓದಿ : Blast in Bengaluru : ರಾಮೇಶ್ವರಂ ಕೆಫೆ ಸ್ಫೋಟಕ್ಕೂ ಅಂಬಾನಿ ಪುತ್ರನ ಮದುವೆಗೂ ಕನೆಕ್ಷನ್‌?

ಉದ್ಯಮಿ ದಂಪತಿಗೆ ಈಗ ಪುಟ್ಟ ಮಗು

ಎಲ್ಲರೂ ತಿಳಿದುಕೊಂಡ ಹಾಗೆ ದಿವ್ಯಾ ಮತ್ತು ರಾಘವೇಂದ್ರ ರಾವ್‌ ಅವರು ಮದುವೆಯಾದ ಬಳಿಕ ಕಟ್ಟಿದ ಸಂಸ್ಥೆಯಲ್ಲ ಈ ರಾಮೇಶ್ವರಂ ಕೆಫೆ. ಅದು ಅವರು ಪರಿಚಿತರಾಗಿದ್ದು ಬ್ಯುಸಿನೆಸ್‌ ಪಾರ್ಟ್ನರ್‌ಗಳಾಗಿ ಕಟ್ಟಿದ್ದು. ಬಳಿಕವಷ್ಟೇ ಅವರು ಬದುಕಿನಲ್ಲೂ ಪಾಲುದಾರರಾದರು. ಅಂದ ಹಾಗೆ, ಈ ದಂಪತಿಗೆ ಒಂದು ಪುಟ್ಟ ಮಗುವಿದೆ. ಶುಕ್ರವಾರ ಮಧ್ಯಾಹ್ನ ಬೆಂಗಳೂರಿನ ವೈಟ್‌ ಫೀಲ್ಡ್‌ ಸಮೀಪದ ಬ್ರೂಕ್‌ಫೀಲ್ಡ್‌ನಲ್ಲಿರುವ ರಾಮೇಶ್ವರಂ ಕೆಫೆಯಲ್ಲಿ ಬಾಂಬ್‌ ಸ್ಫೋಟ ಸಂಭವಿಸುತ್ತಿದ್ದಾಗ ದಿವ್ಯಾ ರಾವ್‌ ಅವರು ಜಗದ ಪರಿವೆಯನ್ನೇ ಮರೆತು ತನ್ನ ಪುಟ್ಟ ಕಂದಮ್ಮನನ್ನು ಕಾಲ ಮೇಲೆ ಮಲಗಿಸಿ ಬಿಸಿ ಬಿಸಿ ಸ್ನಾನ ಮಾಡಿಸುತ್ತಿದ್ದರು. ಇದು ದಿವ್ಯಾ ರಾವ್‌ ಎಂಬ ಹೆಣ್ಮಗಳ ಸರಳತೆಯ ಚಿತ್ರ.

ಕ್ಷಣ ಕ್ಷಣದ ಮಾಹಿತಿಗಾಗಿ Vistara News FaceBook ಪೇಜ್ ಫಾಲೋ ಮಾಡಿ
ಮಹತ್ವದ ಮಾಹಿತಿಗಾಗಿ ವಿಸ್ತಾರ ನ್ಯೂಸ್ ಆ್ಯಪ್ ಉಚಿತವಾಗಿ ಡೌನ್ ಲೋಡ್ ಮಾಡಿಕೊಳ್ಳಿ: Andriod App | IOS App

ಆರೋಗ್ಯ

Tea Tips: ಹಾಲಿನ ಚಹಾ ಬದಲು ಬ್ಲ್ಯಾಕ್‌ ಟೀ ಕುಡಿಯಿರಿ!

ಕಾಫಿ ಮತ್ತು ಚಹಾ ಸೇವನೆ (Tea Tips) ಭಾರತ ಉಪಖಂಡದ ಸಂಸ್ಕೃತಿ ಎನಿಸಿದೆ. ಆದರೆ ಅದನ್ನು ಅತಿಯಾಗಿ ಸೇವಿಸುವುದರಿಂದ ಆಗುವ ಅಡ್ಡ ಪರಿಣಾಮಗಳ ಬಗ್ಗೆ ಐಸಿಎಂಆರ್‌ ಗಮನ ಸೆಳೆದಿದೆ. ಚಾ-ಕಾಪಿ ಕುಡಿಯುವುದಕ್ಕೆ ಮಿತಿ ಎಷ್ಟು, ಯಾವಾಗ ಕುಡಿಯಬಹುದು ಎಂಬಿತ್ಯಾದಿ ಮಾಹಿತಿಗಳನ್ನೂ ನೀಡಿದೆ. ಈ ಲೇಖನ ಓದಿ, ಟೀ ಬಗ್ಗೆ ಒಂದಿಷ್ಟು ಮಾಹಿತಿ ತಿಳಿದುಕೊಳ್ಳಿ.

VISTARANEWS.COM


on

Tea Tips
Koo

ಭಾರತೀಯರಿಗೆ ಕಾಫಿ-ಚಹಾ ಇಲ್ಲದೆ (Tea Tips) ಬೆಳಗಾಗುವುದೇ ಇಲ್ಲ. ಆದರೆ ಅತಿಯಾಗಿ ಕೆಫೇನ್‌ ಸೇವಿಸುವುದರಿಂದ ಆರೋಗ್ಯಕ್ಕೆ ಹಾನಿ ಎಂಬುದು ಎಲ್ಲರಿಗೂ ತಿಳಿದೇ ಇದೆ. ಇದೀಗ ಭಾರತೀಯ ವೈದ್ಯಕೀಯ ಸಂಶೋಧನಾ ಮಂಡಳಿ (ಐಸಿಎಂಆರ್‌) ಈ ಬಗ್ಗೆ ವಿಸ್ತೃತವಾದ ನಿರ್ದೇಶನಗಳನ್ನು ನೀಡಿದ್ದು, ಕೆಫೇನ್‌ ಎಷ್ಟು ಸೇವಿಸಬಹುದು ಮತ್ತು ಯಾವಾಗ ಸೇವಿಸಬಹುದು ಎಂಬ ಬಗ್ಗೆ ಉಪಯುಕ್ತ ಮಾಹಿತಿಗಳನ್ನು ನೀಡಿದೆ. ಮಾತ್ರವಲ್ಲ, ಅತಿಯಾದ ಕೆಫೇನ್‌ ಸೇವನೆಯಿಂದ ಆರೋಗ್ಯದ ಮೇಲಾಗುವ ದುಷ್ಪರಿಣಾಮಗಳ ಬಗ್ಗೆಯೂ ಎಚ್ಚರಿಕೆ ನೀಡಿದೆ.
ರಾಷ್ಟ್ರೀಯ ಪೌಷ್ಟಿಕಾಂಶ ಸಂಸ್ಥೆ (ಎನ್‌ಐಎನ್‌) ಜೊತೆಗೂಡಿ, 17 ಹೊಸ ಆಹಾರಕ್ರಮದ ನಿರ್ದೇಶನಗಳನ್ನು ಐಸಿಎಂಆರ್‌ ಬಿಡುಗಡೆ ಮಾಡಿದೆ. ಭಾರತೀಯರಿಗಾಗಿಯೇ ಬಿಡುಗಡೆ ಮಾಡಲಾಗಿರುವ ಈ ಮಾರ್ಗದರ್ಶಿ ಸೂತ್ರಗಳು ಆರೋಗ್ಯಕರ ಆಹಾರ ಕ್ರಮವನ್ನು ದೇಶದೆಲ್ಲೆಡೆ ಪ್ರಚುರಪಡಿಸುವ ಉದ್ದೇಶವನ್ನು ಹೊಂದಿವೆ. ಈ ನಿರ್ದೇಶನಗಳಲ್ಲಿ ಅತಿಯಾಗಿ ಕಾಫಿ-ಚಹಾ ಸೇವನೆಯ ಅಡ್ಡ ಪರಿಣಾಮಗಳನ್ನೂ ತಿಳಿಸಲಾಗಿದೆ.

Cup of Tea

ಹೆಚ್ಚಾದರೆ ಏನಾಗುತ್ತದೆ?

ಕಾಫಿ-ಚಹಾ ಹೆಚ್ಚು ಕುಡಿದರೆ ಏನಾಗುತ್ತದೆ ಎನ್ನುವುದಕ್ಕೆ ಸಂಸ್ಥೆ ಸ್ಪಷ್ಟ ಉತ್ತರ ನೀಡಿದೆ. ಚಹಾ, ಕಾಫಿ ಹೆಚ್ಚು ಕುಡಿಯುವುದರಿಂದ ಆಹಾರದಲ್ಲಿನ ಕಬ್ಬಿಣದ ಅಂಶವನ್ನು ಹೀರಿಕೊಳ್ಳಲು ದೇಹಕ್ಕೆ ತೊಡಕಾಗುತ್ತದೆ. ಕೆಫೇನ್‌ ಪೇಯಗಳಲ್ಲಿರುವ ಟ್ಯಾನಿನ್‌ಗಳು ಕಬ್ಬಿಣದಂಶ ಹೀರಿಕೊಳ್ಳಲು ಅಡ್ಡಿಪಡಿಸುತ್ತವೆ. ಇದರಿಂದ ಕಬ್ಬಿಣದಂಶದ ಕೊರತೆಯಾಗಿ ಅನೀಮಿಯ ಉಂಟಾಗಬಹುದು. ಜೊತೆಗೆ, ಕಾಫಿ-ಟೀ ಸೇವನೆ ಹೆಚ್ಚಾದರೆ ರಕ್ತದೊತ್ತಡ ಸ್ಥಿರವಾಗಿರದೆ, ಏರಿಳಿತ ಕಾಣಬಹುದು. ಹೃದಯದ ತೊಂದರೆಗಳು ಅಂಟಿಕೊಳ್ಳಬಹುದು.

ಯಾವಾಗ ಸೇವಿಸಬಹುದು?

ಹೊಟ್ಟೆ ತೀವ್ರವಾಗಿ ಹಸಿದಿದ್ದಾಗ, ಆಹಾರದ ಜೊತೆಗೆ ಅಥವಾ ಆಹಾರ ಸೇವಿಸಿದ ತಕ್ಷಣ ಕೆಫೇನ್‌ ಸೇವನೆ ಸರಿಯಲ್ಲ. ಬದಲಿಗೆ, ಆಹಾರ ಸೇವಿಸಿದ ಒಂದು ತಾಸಿನ ನಂತರ ಕಾಫಿ, ಚಹಾ ಕುಡಿಯಬಹುದು. ಇವುಗಳನ್ನು ಅತಿಯಾಗಿ ಕುಡಿಯುವುದು ಕೇಂದ್ರ ನರಮಂಡಲವನ್ನು ಪ್ರಚೋದಿಸುತ್ತದೆ. ಈ ಮೂಲಕ ವ್ಯಸನವನ್ನೂ ಉಂಟು ಮಾಡುತ್ತದೆ. ಹಾಗಾಗಿ ಇದನ್ನು ಮಿತಿಯಲ್ಲಿ ಇರಿಸಿಕೊಳ್ಳುವುದು ಸೂಕ್ತ.

Black and green tea

ದಿನಕ್ಕೆ ಎಷ್ಟು?

ಇದರರ್ಥ ಕಾಫಿ-ಚಹಾ ಕುಡಿಯುವುದೇ ಬೇಡ ಎಂಬುದಲ್ಲ. ಬದಲಿಗೆ ಮಿತಿ ನಿಗದಿ ಮಾಡಿಕೊಳ್ಳಿ ಎನ್ನುತ್ತದೆ ಈ ನಿರ್ದೇಶನ. ದಿನಕ್ಕೆ 300 ಎಂ.ಜಿ.ಗಿಂತ ಹೆಚ್ಚು ಕೆಫೇನ್‌ ಸೇವನೆ ಸೂಕ್ತವಲ್ಲ. ಆದರೆ ಅದನ್ನು ಲೆಕ್ಕ ಹಾಕುವುದು ಹೇಗೆ? ತಾಜಾ ಡಿಕಾಕ್ಷನ್‌ ತೆಗೆದ 150 ಎಂ.ಎಲ್‌. ಕಾಫಿಯಲ್ಲಿ 80ರಿಂದ 120 ಎಂ.ಜಿ. ಕೆಫೇನ್‌ ಇರುತ್ತದೆ. ಅಷ್ಟೇ ಪ್ರಮಾಣದ ಇನ್‌ಸ್ಟಂಟ್‌ ಕಾಫಿಯಲ್ಲಿ 50ರಿಂದ 65 ಎಂ.ಜಿ. ಕೆಫೇನ್‌ ಇರುತ್ತದೆ. ಒಂದು ಸರ್ವಿಂಗ್‌ ಚಹಾದಲ್ಲಿ 30ರಿಂದ 65 ಎಂ.ಜಿ.ವರೆಗೂ ಕೆಫೇನ್‌ ದೇಹಕ್ಕೆ ದೊರೆಯುತ್ತದೆ. ಈ ಪ್ರಮಾಣಗಳನ್ನು ತಿಳಿದುಕೊಂಡರೆ, ಕೆಫೇನ್‌ ಎಷ್ಟು ಸೇವಿಸುತ್ತಿದ್ದೇವೆ ಎಂಬುದನ್ನು ಲೆಕ್ಕ ಹಾಕುವುದಕ್ಕೆ ಕಷ್ಟವಾಗುವುದಿಲ್ಲ.

ಇದನ್ನೂ ಓದಿ: Hair Conditioner: ರಾಸಾಯನಿಕ ಹೇರ್‌ ಕಂಡೀಷನರ್‌ ಬಿಡಿ; ಈ 5 ನೈಸರ್ಗಿಕ ಹೇರ್ ಕಂಡೀಷನರ್ ಬಳಸಿ

ಹಾಲಿನ ಚಹಾ ಬೇಡ

ಭಾರತದಲ್ಲಿ ಚಹಾ ಎಂಬುದು ಪ್ರಾರಂಭವಾಗಿದ್ದು ಬ್ರಿಟೀಷರಿಂದ. ಇಂಗ್ಲಿಷ್‌ ಚಹಾ ಎಂದರೆ ಹಾಲು ಸೇರಿಸಿದ ಚಹಾ. ಬ್ಲ್ಯಾಕ್‌ ಟೀ, ಗ್ರೀನ್‌ ಟೀ, ಲೆಮೆನ್‌ ಟೀ ಇತ್ಯಾದಿಗಳೆಲ್ಲ ನಂತರದಲ್ಲಿ ಬಂದಿದ್ದು. ಆದರೆ ಹಾಲು ಬೆರೆಸಿದ ಚಹಾಗಿಂತ ಬ್ಲ್ಯಾಕ್‌ ಟೀ ಸೇವಿಸುವುದು ಒಳ್ಳೆಯದು ಎಂಬುದು ಐಸಿಎಂಆರ್‌ ಅಭಿಮತ. ಇದಕ್ಕೆ ಕಾರಣಗಳೂ ಇಲ್ಲದಿಲ್ಲ. ಬ್ಲ್ಯಾಕ್‌ ಟೀ ರಕ್ತ ಪರಿಚಲನೆಯನ್ನು ಸುಧಾರಿಸುತ್ತದೆ. ಇದರಿಂದ ಹೃದಯದ ಆರೋಗ್ಯ ಸುಧಾರಿಸುವ ಸಂಭವವಿದೆ. ಜೊತೆಗೆ, ಹೊಟ್ಟೆಯ ಕ್ಯಾನ್ಸರ್‌ ಭೀತಿಯನ್ನೂ ಕಡಿಮೆ ಮಾಡುತ್ತದೆ. ಹಾಗಾಗಿ ಹಾಲು ಬೆರೆಸಿದ ಚಹಾ ಸೇವನೆಯನ್ನು ಕಡಿಮೆ ಮಾಡಿ ಎಂಬುದು ಸಂಸ್ಥೆಯ ಕಿವಿಮಾತು.

Continue Reading

ವಿಜಯನಗರ

Food Department : ಜೀವಂತ ಇದ್ದವಳನ್ನು ಸತ್ತಿದ್ದಾಗಿ ಘೋಷಿಸಿದ ಆಹಾರ ಇಲಾಖೆ; ರೇಷನ್‌ ಕಾರ್ಡ್‌ನಿಂದಲೇ ಹೆಸರು ಡಿಲೀಟ್‌

Food Department : ತಾಯಿ-ಮಗ ಜೀವಂತವಾಗಿದ್ದರೂ, ಬದುಕಿಲ್ಲ ಎಂದು ಪಡಿತರ ಚೀಟಿಯಿಂದ (BPL Card) ಹೆಸರನ್ನೇ ಡಿಲೀಟ್‌ ಮಾಡಿದ್ದಾರೆ. ಸ್ಥಳ ಪರಿಶೀಲನೆ ಮಾಡದೆ ಮಾಹಿತಿಯನ್ನು ಖಚಿತ ಪಡಿಸಿಕೊಳ್ಳದೇ ಆಹಾರ ಇಲಾಖೆಯ (ration card) ಅಧಿಕಾರಿಗಳ ಯಡವಟ್ಟಿಗೆ ಕಡು ಬಡತನದ ಕುಟುಂಬವೊಂದು ಪರದಾಡುತ್ತಿದೆ.

VISTARANEWS.COM


on

By

Food department deletes name from ration card list even though it is alive
Koo

ವಿಜಯನಗರ: ಜೀವಂತವಾಗಿರುವ ತಾಯಿ-ಮಗನನ್ನು ಸತ್ತಿದ್ದಾಗಿ ಘೋಷಿಸಿ, ಇಬ್ಬರನ್ನೂ ಪಡಿತರ ಚೀಟಿ (BPL Card) ಹೆಸರಿನಿಂದ ಆಹಾರ ಇಲಾಖೆಯು (Food Department) ಡಿಲೀಟ್ ಮಾಡಿದೆ. ವಿಜಯನಗರ ಜಿಲ್ಲೆಯ ಆಹಾರ ಇಲಾಖೆಯ ಅಧಿಕಾರಿಗಳ (ration card) ಯಡವಟ್ಟಿಗೆ ವ್ಯಾಪಕ ಖಂಡನೆ ವ್ಯಕ್ತವಾಗಿದೆ.

ಅಂಜೀನಮ್ಮ ಮತ್ತು ಅವರ ಪುತ್ರ ಅಜಯ್ ಬದುಕಿದ್ದರೂ 2019ರಲ್ಲೇ ಸತ್ತಿದ್ದಾರೆ ಎಂದು ಬಿಪಿಎಲ್‌ ಕಾರ್ಡ್‌ನಿಂದ ಹೆಸರು ಡಿಲೀಟ್‌ ಮಾಡಲಾಗಿದೆ. ಕಳೆದ ಐದು ವರ್ಷದಿಂದ ಪಡಿತರದಿಂದ ಬಡ ಕುಟುಂಬವೊಂದು ವಂಚಿತವಾಗಿದೆ. ಆಹಾರ ಇಲಾಖೆ ಯಡವಟ್ಟಿನಿಂದ ಪಡಬಾರದ ಕಷ್ಟ ಪಡುತ್ತಿರುವ ಕುಟಂಬ ತಿಂಗಳ ಪಡಿತರಕ್ಕೂ ಅಲೆಯುತ್ತಿದೆ.

ಇದನ್ನೂ ಓದಿ: Road Accident : ಬಸ್‌ ಗುದ್ದಿದ ರಭಸಕ್ಕೆ ಕಾರು ಛಿದ್ರ ಛಿದ್ರ; ಚಾಲಕ ಸ್ಪಾಟ್‌ ಡೆತ್‌, ನಾಲ್ವರಿಗೆ ಗಾಯ

ಆಹಾರ ಇಲಾಖೆ ಯಾರದ್ದೋ ಮಾತು ಕೇಳಿ ಪಡಿತರ ಚೀಟಿಯಿಂದ ಹೆಸರು ಡಿಲೀಟ್ ಮಾಡಿದೆ. ಕೂಡ್ಲಿಗಿ ತಾಲೂಕಿನ ಅಂಜಿನಮ್ಮ ತೀರಾ ಕಡು ಬಡವರಾಗಿದ್ದು, ಆಹಾರ ಇಲಾಖೆಯ ಕೆಲಸಕ್ಕೆ ಇತರೇ ಸೌಕರ್ಯಗಳಿಂದ ವಂಚಿತರಾಗಿದ್ದಾರೆ. ರೇಷನ್ ಕಾರ್ಡ್ ಇಲ್ಲದೇ ಇರುವುದರಿಂದ ಗೃಹ ಲಕ್ಷ್ಮೀ ಯೋಜನೆಯ ಲಾಭವೂ ಅಂಜಿನಮ್ಮಗೆ ಸಿಕ್ಕಿಲ್ಲ.

ಇತ್ತ ನ್ಯಾಯಕ್ಕಾಗಿ ಅಂಜಿನಮ್ಮ ಕುಟುಂಬ ನಿತ್ಯ ಆಹಾರ ಇಲಾಖೆ, ನ್ಯಾಯಬೆಲೆ ಅಂಗಡಿಗೆ ಅಲೆದು ಸುಸ್ತಾಗಿದ್ದಾರೆ. ಆಹಾರ ಇಲಾಖೆಯ ಅಧಿಕಾರಿಗಳ ನಿರ್ಲಕ್ಷ್ಯಕ್ಕೆ ಸ್ಥಳೀಯರು ಆಕ್ರೋಶ ಹೊರಹಾಕಿದ್ದಾರೆ. ಪಡಿತರ ಚೀಟಿಯಿಂದ ಹೆಸರು ತೆಗೆಯಬೇಕಾದರೆ ಅಧಿಕಾರಿಗಳು ಸ್ಪಾಟ್‌ ವಿಸಿಟ್‌ ಮಾಡಬೇಕು. ಪಡಿತರ ಚೀಟಿಯಲ್ಲಿ ಇರುವವರು ಬದುಕಿದ್ದಾರಾ ಇಲ್ವಾ ಎಂಬುದನ್ನು ಖಚಿತ ಪಡಿಸಿಕೊಳ್ಳಬೇಕು. ಅಧಿಕಾರಿಗಳು ಪರಿಶೀಲಿಸದೇ ಹೀಗೆ ಅಂಜೀನಮ್ಮ ಹೆಸರು ತೆಗೆದಿರುವುದು ಸರಿಯಲ್ಲ ಎಂದು ಕಿಡಿಕಾರಿದ್ದಾರೆ.

ಈ ಸಂಗತಿಯ ಕುರಿತು ನಿಮ್ಮ ಅನಿಸಿಕೆ ಏನು? ಕಾಮೆಂಟ್ ಮೂಲಕ ತಿಳಿಸಿ

Continue Reading

ಆಹಾರ/ಅಡುಗೆ

History Of Ice Cream: ಎಲ್ಲರ ನೆಚ್ಚಿನ ಐಸ್‌ಕ್ರೀಮ್‌ ಹುಟ್ಟಿದ್ದು ಹೇಗೆ?

ಐಸ್‌ಕ್ರೀಮ್‌ ಪ್ರಿಯರಿಗೆ (History Of Ice Cream) ಕಾಲ-ದೇಶ-ಪಾತ್ರಗಳ ಹಂಗಿಲ್ಲ. ಚಳಿ-ಮಳೆ-ಬಿಸಿಲು ಎಂಬ ಭೇದವಿಲ್ಲದೆ, ಹಗಲು-ರಾತ್ರಿಗಳ ಲಕ್ಷ್ಯವಿಲ್ಲದಂತೆ ಐಸ್‌ಕ್ರೀಮ್‌ ತಿನ್ನಬಲ್ಲರು. ವಯಸ್ಸಿನ ಭೇದವನ್ನೂ ಮೀರಿ ಇಷ್ಟೊಂದು ಮೆಚ್ಚಾಗಿರುವ ಐಸ್‌ಕ್ರೀಮ್‌ (Ice Cream) ಹುಟ್ಟಿದ್ದು ಯಾವಾಗ? ಕುತೂಹಲಕರ ಹಿನ್ನೋಟ ಇಲ್ಲಿದೆ.

VISTARANEWS.COM


on

History Of Ice Cream
Koo

ಬೇಸಿಗೆಯನ್ನು ದೂರುವವರು (History Of Ice Cream) ಇರುವಂತೆಯೇ ಅದನ್ನು ಇಷ್ಟ ಪಡುವವರೂ ಇದ್ದಾರೆ. ಯಾಕೆ ಇಷ್ಟ ಬೇಸಿಗೆ ಎಂದು ಕೇಳಿದರೆ ಜ್ಯೂಸ್‌, ಎಳನೀರು ಮುಂತಾದ ತಂಪು ಪೇಯಗಳನ್ನು ಕುಡಿಯುವುದಕ್ಕೆ ಎನ್ನುವವರಿರಬಹುದು; ಆದರೆ ಐಸ್‌ಕ್ರೀಮ್‌ (Ice Cream) ಮೆಲ್ಲುವುದಕ್ಕೆ ಎನ್ನುವವರದ್ದೇ ಬಹುಮತ. ತರಹೇವಾರಿ ಬಣ್ಣ, ಆಕಾರ, ರುಚಿಗಳಲ್ಲಿ ದೊರೆಯುವ ಇವುಗಳನ್ನೇ ನಂಬಿ-ನೆಚ್ಚಿ ಬದುಕಿದವರಿದ್ದಾರೆ. ಹಾಗಾಗಿ ಉಳಿದೆಲ್ಲ ತಿನಿಸುಗಳನ್ನೂ ಮೀರಿಸಿದ್ದು ಇವುಗಳ ಜನಪ್ರಿಯತೆ. ಹಾಗೆಂದೇ ಐಸ್‌ಕ್ರೀಮ್‌ ಪ್ರಿಯರಿಗೆ ಕಾಲ-ದೇಶ-ಪಾತ್ರಗಳ ಹಂಗಿಲ್ಲ. ಚಳಿ-ಮಳೆ-ಬಿಸಿಲು ಎಂಬ ಭೇದವಿಲ್ಲದೆ, ಹಗಲು-ರಾತ್ರಿಗಳ ಲಕ್ಷ್ಯವಿಲ್ಲದಂತೆ ಐಸ್‌ಕ್ರೀಮ್‌ ತಿನ್ನಬಲ್ಲರು. ವಯಸ್ಸಿನ ಭೇದವನ್ನೂ ಮೀರಿ ಇಷ್ಟೊಂದು ಮೆಚ್ಚಾಗಿರುವ ಐಸ್‌ಕ್ರೀಮ್‌ ಹುಟ್ಟಿದ್ದು (Ice Cream) ಯಾವಾಗ? ಶತಮಾನಗಳಿಂದ ವಿಕಾಸಕೊಳ್ಳುತ್ತಲೇ ಬಂದಿರುವ ಇದು ನಡೆದಿರುವ ಹಾದಿ ಹೇಗಿದೆ ಎಂಬ ಕುತೂಹಲದ ನೋಟವಿದು.

Ice Cream

ಹುಟ್ಟಿದ್ದು ಎಲ್ಲಿ?

ಹಳೆಯ ಮೆಸಪೊಟೇಮಿಯ ನಾಗರಿಕತೆಯಲ್ಲಿ ಯೂಫ್ರೆಟಿಸ್‌ ನದಿಯ ದಂಡೆಯಲ್ಲಿ ಐಸ್‌ ಮನೆಗಳಂತೆ ಮಾಡಿ, ಅಲ್ಲಿ ವಸ್ತುಗಳನ್ನು ತಣ್ಣಗೆ ಇರಿಸಿಕೊಳ್ಳುತ್ತಿದ್ದಂತೆ. ಇದೀಗ ಕ್ರಿ.ಪೂ. 4000 ವರ್ಷಗಳ ಹಿಂದಿನ ಕಥೆ! ಅಂದರೆ, ತಣ್ಣಗಿನ ವಸ್ತುಗಳನ್ನು ತಿನ್ನುವ ಖಯಾಲಿ ಅಷ್ಟೊಂದು ಸಾವಿರ ವರ್ಷಗಳ ಹಿಂದೆಯೇ ಮನುಷ್ಯರಿಗಿತ್ತು ಎಂದಾಯಿತು. ಹಳೆಯ ಅಥೆನ್ಸ್‌ನಲ್ಲಿ ವೈನ್‌ಗಳನ್ನು ತಣ್ಣಗಿರಿಸಲು ಐಸ್‌ ಬಳಸುತ್ತಿದ್ದ ಕಥೆಗಳಿವೆ. ಪ್ರಾಚೀನ ಚೀನಾದಲ್ಲಿ ಟಾಂಗ್‌ ರಾಜವಂಶದವರು ಹಾಲಿನಿಂದ ಮಾಡಿದ ಖಾದ್ಯಗಳನ್ನು ಹೀಗೆ ತಣ್ಣಗಾಗಿಸಿ ತಿನ್ನುತ್ತಿದ್ದ ಉಲ್ಲೇಖಗಳಿವೆ. ಭಾರತದಲ್ಲಿ ಮೊಘಲರೂ ಗಟ್ಟಿಯಾದ ಕೆನೆಭರಿತ ಹಾಲಿನಲ್ಲಿ ಕುಲ್ಫಿಯಂಥವನ್ನು ಮಾಡಿ ಸವಿಯುತ್ತಿದ್ದರಂತೆ. ಇವೆಲ್ಲವೂ ಒಂದಿಲ್ಲೊಂದು ರೀತಿಯಲ್ಲಿ ಇಂದಿನ ಐಸ್‌ಕ್ರೀಮಿನ ಪೂರ್ವಸ್ಥಿತಿಗಳು ಎಂದು ಹೇಳಲಾಗುತ್ತದೆ.

ಐಸ್‌ಕ್ರೀಮ್‌ನ ಆಧುನಿಕ ರೂಪ

ಈ ತಿನಿಸಿಗಿರುವ ಇಂದಿನ ರೂಪದ ಸಮೀಪಕ್ಕೆ ಮೊದಲು ಬಂದಿದ್ದು ಇಟಲಿಯಲ್ಲಿ, ಹದಿನೇಳನೇ ಶತಮಾನದ ನಡುವಿಗೆ. ನಂತರ, ಫ್ರಾನ್ಸ್‌, ಸ್ಪೇನ್‌ ಸೇರಿದಂತೆ ಯುರೋಪ್‌ನೆಲ್ಲೆಡೆ ಮೇಜವಾನಿಗಳ ಮೋಜು ಹೆಚ್ಚಿಸುವ ನೆಚ್ಚಿನ ವಸ್ತುವಾಯಿತು ಇದು. 1671ರಲ್ಲಿ ಬ್ರಿಟನ್‌ನ ರಾಜ ಎರಡನೇ ಚಾರ್ಲ್ಸ್‌ ಮೊದಲಿಗೆ ಐಸ್‌ಕ್ರೀಮ್‌ ಸವಿದ ದಾಖಲೆಗಳಿವೆ. ಆದರೆ ಇದರಿಂದಲೇ ಆರೋಗ್ಯದ ತುರ್ತು ಪರಿಸ್ಥಿತಿ ಇಂಗ್ಲೆಂಡ್‌ನಲ್ಲಿ ಉದ್ಭವವಾಗಿತ್ತು ಮಾತ್ರ ಕುತೂಹಲಕರ ಸಂಗತಿ.

Penny Lick

ʻಪೆನ್ನಿ ಲಿಕ್‌ʼ

19ನೇ ಶತಮಾನದ ಹೊತ್ತಿಗೆ ಇಂಗ್ಲೆಂಡ್‌ನಲ್ಲಿ ಇದೆಷ್ಟು ಜನಪ್ರಿಯವಾಯಿತೆಂದರೆ, ರಾಜರ, ಶ್ರೀಮಂತರ ಊಟದ ಟೇಬಲ್‌ನ ಸೀಮೆಯನ್ನು ಮೀರಿ, ಬೀದಿಬೀದಿಗಳಲ್ಲಿ ಮಾರಾಟವಾಗತೊಡಗಿತು. ಒಂದು ʻಪೆನ್ನಿʼಗೆ (ಅಲ್ಲಿನ ಪೈಸೆ) ಪುಟ್ಟ ಕಪ್‌ನಲ್ಲಿ ಐಸ್‌ಕ್ರೀಮ್‌ ತುಂಬಿಸಿ ಕೊಡಲಾಗುತ್ತಿತ್ತು. ಇದನ್ನು ನೆಕ್ಕಿ ಸ್ವಚ್ಛ ಮಾಡಿ ಗ್ರಾಹಕರು ಮರಳಿ ನೀಡುತ್ತಿದ್ದರು. ಇದು ʻಪೆನ್ನಿ ಲಿಕ್‌ʼ ಎಂದೇ ಪ್ರಸಿದ್ಧವಾಯಿತು. ಇದೆಷ್ಟು ಜನಪ್ರಿಯವಾಯಿತೆಂದರೆ ಬರುವ ಗ್ರಾಹಕರಿಗೆ ಐಸ್‌ಕ್ರೀಮ್‌ ಕಪ್‌ಗಳನ್ನು ತೊಳೆದು ತುಂಬಿಸಿಕೊಡುವಷ್ಟು ವ್ಯವಧಾನವಿಲ್ಲದ ವ್ಯಾಪಾರಿಗಳು, ಸ್ವಚ್ಛತೆಯನ್ನು ಕಡೆಗಣಿಸಿದರು. ಇದರಿಂದ ಕಾಲರಾ, ಕ್ಷಯದಂಥ ರೋಗಗಳು ತೀವ್ರವಾಗಿ ಹರಡಲಾರಂಭಿಸಿದವು. 1879ರಲ್ಲಿ ಕಾಲರಾ ಸಾಂಕ್ರಾಮಿಕ ಹರಡಿದ್ದು ʻಪೆನ್ನಿ ಲಿಕ್‌ʼನಿಂದಾಗಿಯೇ ಎಂದು ಅಲ್ಲಿನ ಆರೋಗ್ಯ ದಾಖಲೆಗಳು ಹೇಳುತ್ತವೆ.
ಅಂತಿಮವಾಗಿ ʻಪೆನ್ನಿ ಲಿಕ್‌ʼ ಮೇಲೆ ನಿಷೇಧ ಹೇರಲಾಯಿತು. ಇದರ ಪರಿಣಾಮವೆಂದರೆ ಹೊಸ ಆವಿಷ್ಕಾರಗಳನ್ನು ವರ್ತಕರು ಮಾಡಿದ್ದು. ಐಸ್‌ಕ್ರೀಮ್‌ ಕೋನ್‌ಗಳು ರೂಪುಗೊಂಡಿದ್ದು ಹೀಗೆ. ಸ್ವಚ್ಛತೆಯ ರಗಳೆಯಿಲ್ಲದೆ, ಕಪ್‌ ತೊಳೆದಿದ್ದಾರೋ ಇಲ್ಲವೋ ಎಂಬ ಹೆದರಿಕೆಗೆ ಅವಕಾಶವಿಲ್ಲದಂತೆ ಯಾರು, ಎಲ್ಲಿ ಬೇಕಾದರೂ ಸೇವಿಸಬೇಕಾದಂತೆ ಕೋನ್‌ಗಳನ್ನು ಸಿದ್ಧಪಡಿಸಲಾಯಿತು. ಹಾಗೆಯೇ ಕಡ್ಡಿ ಚುಚ್ಚಿ ಕೊಡುವ ಇನ್ನೂ ಅಗ್ಗದ ಕ್ಯಾಂಡಿಗಳು ಸಹ ಪ್ರಚಾರಕ್ಕೆ ಬಂದವು.

ಇದನ್ನೂ ಓದಿ: Food Tips Kannada: ಸಸ್ಯಾಹಾರಿಗಳಿಗೆ ಒಮೇಗಾ 3 ಕೊಬ್ಬಿನಾಮ್ಲ ಯಾವುದರಲ್ಲಿ ದೊರೆಯುತ್ತದೆ?

ಅಲ್ಲಿಂದ ಮುಂದುವರಿದು, ಹೊಸ ರುಚಿಗಳು, ಫ್ಲೇವರ್‌ಗಳು ರೂಪುಗೊಂಡವು. ಸರಳವಾದ ವೆನಿಲಾದಿಂದ ಹಿಡಿದು, ನಾನಾ ರೀತಿಯ ʻಸಂಡೇʼ ಫ್ಲೇವರ್‌ಗಳು, ಕಾಯಿ-ಬೀಜಗಳನ್ನು ಒಳಗೊಂಡ ದುಬಾರಿ ಬೆಲೆಯವು, ಎಲ್ಲೆಲ್ಲೋ ಬೆಳೆಯುವ ಹಣ್ಣುಗಳನ್ನು ಸೇರಿಸಿಕೊಂಡವು- ಹೀಗೆ ಲೆಕ್ಕವಿಲ್ಲದಷ್ಟು ನಮೂನೆಯ ಐಸ್‌ಕ್ರೀಮ್‌ಗಳು ಈಗ ಲಭ್ಯವಾಗುತ್ತವೆ. ಸುಡು ಬೇಸಿಗೆಯನ್ನು ಸಹನೀಯವಾಗಿಸಿ, ಮಕ್ಕಳಿಗೆ ಮೋಜು ನೀಡುತ್ತಿವೆ. ಆದರೆ ಅದು ಬೆಳೆದುಬಂದ ಚರಿತ್ರೆಯನ್ನು ನೋಡಿದಾಗ, ಎಷ್ಟೊಂದು ಶತಮಾನಗಳ ಹಿಂದೆ ಐಸ್‌ಕ್ರೀಮ್‌ನ ಈ ಪಯಣ ಆರಂಭವಾಯಿತು ಎಂಬುದು ತಿಳಿಯುತ್ತದೆ. ಜೊತೆಗೆ, ಸದಾಕಾಲ ವಿಕಾಸಗೊಳ್ಳುತ್ತಲೇ ಇರುವ ಮಾನವನ ಜಿಹ್ವಾ ಚಾಪಲ್ಯದ ಇತಿಹಾಸವೂ ಅನಾವರಣಗೊಳ್ಳುತ್ತದೆ.

Continue Reading

ಆರೋಗ್ಯ

Healthy Diet: ಬೆಣ್ಣೆ ಆರೋಗ್ಯಕ್ಕೆ ಒಳ್ಳೆಯದೇ ಕೆಟ್ಟದ್ದೇ? ಈ ಸಂಗತಿ ತಿಳಿದುಕೊಂಡಿರಿ

ಬೆಣ್ಣೆ ಆರೋಗ್ಯಕ್ಕೆ ಕೆಟ್ಟದು ಎಂದು ಕೆಲವರು ಭಾವಿಸುತ್ತಾರೆ. ಆದರೆ ನೀವು ಅದನ್ನು ಮಿತವಾಗಿ ಸೇವಿಸಿದರೆ ಅದು ಕೆಟ್ಟದ್ದಲ್ಲ ಎನ್ನುತ್ತಾರೆ ಇನ್ನು ಕೆಲವರು. ಹೌದು ಬೆಣ್ಣೆಯನ್ನು ಮಿತವಾಗಿ ಸೇವಿಸಿದರೆ ಮಾತ್ರ ಆರೋಗ್ಯಕರ ಆಹಾರದ (Healthy Diet) ಭಾಗವಾಗುವುದು ನಿಜ. ಈ ಕುರಿತು ಇಲ್ಲಿದೆ ಉಪಯುಕ್ತ ಮಾಹಿತಿ.

VISTARANEWS.COM


on

By

Healthy Diet
Koo

ಹಾಲು (milk), ಮೊಸರು (curd), ತುಪ್ಪ (ghee), ಬೆಣ್ಣೆ (butter) ಇಲ್ಲದೇ ಇದ್ದರೆ ಭಾರತೀಯರ ಮನೆಗಳಲ್ಲಿ ಅಡುಗೆ ಕೆಲಸ ಕಾರ್ಯಗಳು ಒಂದೂ ನಡೆಯುವುದಿಲ್ಲ. ಆರೋಗ್ಯದ ವಿಚಾರದಲ್ಲಿ (Healthy Diet) ಹಾಲು, ತುಪ್ಪ, ಮೊಸರಿನ ಬಗ್ಗೆ ಅಷ್ಟೇನು ಸಂದೇಹವಿಲ್ಲ. ಆದರೆ ಬೆಣ್ಣೆಯ ವಿಚಾರ ಬಂದಾಗ ಇದು ಆರೋಗ್ಯಕರ ಹೌದೋ ಅಲ್ಲವೋ ಎನ್ನುವ ಗೊಂದಲ ಕಾಡುತ್ತದೆ.

ಭಾರತೀಯ ಮನೆಗಳ ಪಾಕ ಶಾಲೆಯಲ್ಲಿ ಬಹುವಿಧವಾಗಿ ಬಳಸುವ ಬೆಣ್ಣೆಯು ಅದರ ಪೋಷಕಾಂಶದಿಂದಲೂ ಹೆಚ್ಚು ಮೌಲ್ಯಯುತ ಎಂದೆನಿಸಿದೆ. ಇದು ಹಲವಾರು ಪೋಷಕಾಂಶಗಳ ಕೇಂದ್ರೀಕೃತ ಮೂಲವಾಗಿದೆ. ಇದರಲ್ಲಿ ಕೊಬ್ಬು ಕರಗಬಲ್ಲ ವಿಟಮಿನ್‌ಗಳಾದ ಎ, ಇ ಮತ್ತು ಕೆ2 ವಿವಿಧ ದೈಹಿಕ ಕಾರ್ಯಗಳಲ್ಲಿ ಪ್ರಮುಖ ಪಾತ್ರ ವಹಿಸುತ್ತದೆ. ಆರೋಗ್ಯಕರ ದೃಷ್ಟಿ, ಚರ್ಮವನ್ನು ಕಾಪಾಡಿಕೊಳ್ಳಲು ಮತ್ತು ಒಟ್ಟಾರೆ ದೇಹದ ಪ್ರತಿರಕ್ಷೆಯನ್ನು ಬೆಂಬಲಿಸಲು ಇವುಗಳು ಅತ್ಯಗತ್ಯ.

ಬೆಣ್ಣೆ ಆರೋಗ್ಯಕ್ಕೆ ಕೆಟ್ಟದು ಎಂದು ಕೆಲವರು ಭಾವಿಸುತ್ತಾರೆ. ಆದರೆ ನೀವು ಅದನ್ನು ಮಿತವಾಗಿ ಸೇವಿಸಿದರೆ ಅದು ಕೆಟ್ಟದ್ದಲ್ಲ ಎನ್ನುತ್ತಾರೆ ಇನ್ನು ಕೆಲವರು. ಹೌದು ಬೆಣ್ಣೆಯನ್ನು ಮಿತವಾಗಿ ಸೇವಿಸಿದರೆ ಮಾತ್ರ ಆರೋಗ್ಯಕರ ಆಹಾರದ ಭಾಗವಾಗುವುದು ನಿಜ. ಅಲ್ಲದೇ ಉತ್ತಮ ಗುಣಮಟ್ಟದ ಬೆಣ್ಣೆಯನ್ನು ಆಯ್ಕೆ ಮಾಡಲು ಸೂಚಿಸಲಾಗುತ್ತದೆ. ಏಕೆಂದರೆ ಇದು ಹೆಚ್ಚಿನ ಪೋಷಕಾಂಶಗಳನ್ನು ಹೊಂದಿರುತ್ತದೆ. ದೇಹಕ್ಕೆ ಅಗತ್ಯವಾದ ಉತ್ತಮ ಕೊಬ್ಬಿನಾಂಶಗಳು ಬೆಣ್ಣೆ, ಆಲಿವ್ ಎಣ್ಣೆ, ಆವಕಾಡೊಗಳಿಂದಲೂ ಸಿಗುತ್ತದೆ.


ಹೆಚ್ಚುವರಿ ಬೆಣ್ಣೆಯನ್ನು ಸೇವಿಸಿದರೆ ಏನಾಗುತ್ತದೆ?

ಬೆಣ್ಣೆಯಲ್ಲಿ ಸ್ಯಾಚುರೇಟೆಡ್ ಕೊಬ್ಬಿನಂಶ ಹೆಚ್ಚಿರುತ್ತದೆ. ಇದನ್ನು ಅಧಿಕವಾಗಿ ಸೇವಿಸಿದಾಗ ಎಲ್‌ಡಿಎಲ್ ಕೊಲೆಸ್ಟ್ರಾಲ್ ಮಟ್ಟವನ್ನು ಹೆಚ್ಚಿಸುತ್ತದೆ ಮತ್ತು ಹೃದ್ರೋಗದ ಅಪಾಯವನ್ನು ಹೆಚ್ಚಿಸುತ್ತದೆ.

ಬೆಣ್ಣೆಯು ಕ್ಯಾಲೋರಿ ದಟ್ಟವಾಗಿರುತ್ತದೆ. ಆದ್ದರಿಂದ ಹೆಚ್ಚಿನ ಪ್ರಮಾಣದಲ್ಲಿ ಸೇವಿಸುವುದರಿಂದ ತೂಕ ಹೆಚ್ಚಾಗಬಹುದು. ಬೆಣ್ಣೆಯನ್ನು ಮಿತವಾಗಿ ಸೇವಿಸಲು ಯಾವಾಗಲೂ ಸಲಹೆ ನೀಡಲಾಗುತ್ತದೆ.

ಹಲವಾರು ಅಧ್ಯಯನಗಳ ಪ್ರಕಾರ ಬೆಣ್ಣೆಯು ರಕ್ತದ ಲಿಪಿಡ್ ಮಟ್ಟವನ್ನು ಹಾನಿಗೊಳಿಸುತ್ತದೆ. ಹೃದಯದ ಪರಿಸ್ಥಿತಿಗಳು ಅಥವಾ ಕೊಲೆಸ್ಟ್ರಾಲ್ ನಿಂದ ಬಳಲುತ್ತಿರುವವರಿಗೆ, ಮಿತವಾಗಿರುವುದು ಮುಖ್ಯವಾಗಿದೆ.

ಇದನ್ನೂ ಓದಿ: Tips for Mothers: ಆಹಾರ- ಆರೋಗ್ಯ; ದುಡಿಯುವ ಬ್ಯುಸಿ ತಾಯಂದಿರಿಗೆ ಇಲ್ಲಿದೆ ಕಿವಿಮಾತು!

ಬೆಣ್ಣೆಯು ಲ್ಯಾಕ್ಟೋಸ್ ಮತ್ತು ಡೇರಿ ಪ್ರೋಟೀನ್‌ಗಳನ್ನು ಹೊಂದಿರುತ್ತದೆ. ಇದು ಡೇರಿ ಅಲರ್ಜಿಯಿಂದ ಬಳಲುತ್ತಿರುವವರಿಗೆ ಸಮಸ್ಯೆಯಾಗಬಹುದು. ಬೆಣ್ಣೆಯನ್ನು ಸೇವಿಸಿದ ಅನಂತರ ಉಬ್ಬುವುದು, ಗ್ಯಾಸ್ ಅಥವಾ ಅತಿಸಾರದಂತಹ ಜೀರ್ಣಕಾರಿ ತೊಂದರೆಗಳನ್ನು ಅವರು ಅನುಭವಿಸಬಹುದು.

ಬೆಣ್ಣೆಯನ್ನು ಮಿತವಾಗಿ ಸೇವಿಸಿದಾಗ ಆರೋಗ್ಯಕರ ಆಹಾರದ ಭಾಗವಾಗಬಹುದು. ಅದರ ಸ್ಯಾಚುರೇಟೆಡ್ ಕೊಬ್ಬಿನಂಶವನ್ನು ಗಮನದಲ್ಲಿಟ್ಟುಕೊಳ್ಳುವುದು ಮತ್ತು ಸಾಧ್ಯವಾದಾಗ ಉತ್ತಮ ಗುಣಮಟ್ಟದ ಆಯ್ಕೆಗಳನ್ನು ಆರಿಸುವುದು ಅತ್ಯಗತ್ಯ. ವೈವಿಧ್ಯಮಯ ಮತ್ತು ಸಮತೋಲಿತ ಆಹಾರದ ಭಾಗವಾಗಿ ಬೆಣ್ಣೆಯನ್ನು ಆನಂದಿಸುವುದು ಉತ್ತಮ.

Continue Reading
Advertisement
Tea Tips
ಆರೋಗ್ಯ11 mins ago

Tea Tips: ಹಾಲಿನ ಚಹಾ ಬದಲು ಬ್ಲ್ಯಾಕ್‌ ಟೀ ಕುಡಿಯಿರಿ!

Sambita Patra
ದೇಶ40 mins ago

Sambit Patra: ಭಗವಾನ್‌ ಜಗನ್ನಾಥನೇ ಮೋದಿಯ ಭಕ್ತ ಎಂದ ಬಿಜೆಪಿ ನಾಯಕ; ಭುಗಿಲೆದ್ದ ವಿವಾದ

Anti Terrorism Day
ದೇಶ1 hour ago

Anti Terrorism Day: ಇಂದು ಭಯೋತ್ಪಾದನಾ ವಿರೋಧಿ ದಿನ; ಏನು ಈ ದಿನದ ಹಿನ್ನೆಲೆ?

Dina Bhavishya
ಭವಿಷ್ಯ2 hours ago

Dina Bhavishya : ಹೂಡಿಕೆ ವ್ಯವಹಾರದಲ್ಲಿ ಹೆಚ್ಚು ಲಾಭ; ಈ ರಾಶಿಯವರಿಗೆ ಖುಲಾಯಿಸಲಿದೆ ಅದೃಷ್ಟ

Prajwal Revanna Case
ಕರ್ನಾಟಕ7 hours ago

Prajwal Revanna Case: ಪ್ರಜ್ವಲ್ ರೇವಣ್ಣ ಪಾಸ್‌ ಪೋರ್ಟ್ ರದ್ದು ಮಾಡಲು ವಿದೇಶಾಂಗ ಇಲಾಖೆಗೆ ಎಸ್‌ಐಟಿ ಪತ್ರ

Mobile
ದೇಶ7 hours ago

ಮೊಬೈಲ್‌ನಲ್ಲಿ ಅಶ್ಲೀಲ ವಿಡಿಯೊ ನೋಡಿ 15 ವರ್ಷದ ಅಕ್ಕನನ್ನೇ ಗರ್ಭಿಣಿ ಮಾಡಿದ 13 ವರ್ಷದ ಬಾಲಕ!

Army Officer
Lok Sabha Election 20247 hours ago

101ನೇ ವಯಸ್ಸಿನಲ್ಲೂ ‘ಕರ್ತವ್ಯ’ ಮರೆಯದೆ ವೋಟ್‌ ಮಾಡಿದ ನಿವೃತ್ತ ಯೋಧ; ಸೆಲ್ಯೂಟ್‌ ಎಂದರು ಜನ

Congress Guarantee
ಪ್ರಮುಖ ಸುದ್ದಿ7 hours ago

Congress Guarantee: ಗ್ಯಾರಂಟಿ ಯೋಜನೆಗಳಿಗೆ ಒಂದು ವರ್ಷಕ್ಕೆ ಸರ್ಕಾರ ಮಾಡಿದ ಖರ್ಚು ಎಷ್ಟು ಸಾವಿರ ಕೋಟಿ?

Malaysia Masters
ಕ್ರೀಡೆ8 hours ago

Malaysia Masters: ವಿಶ್ರಾಂತಿ ಬಳಿಕ ಮಲೇಷ್ಯಾ ಮಾಸ್ಟರ್ಸ್​ನಲ್ಲಿ ಕಣಕ್ಕಿಳಿಯಲು ಸಜ್ಜಾದ ಸಿಂಧು

Rahul Gandhi
ದೇಶ8 hours ago

Rahul Gandhi: ರಾಯ್‌ಬರೇಲಿಯಲ್ಲಿ ಜನ ಜೈ ಶ್ರೀರಾಮ್‌ ಎನ್ನುತ್ತಲೇ ಕಾಲ್ಕಿತ್ತ ರಾಹುಲ್‌ ಗಾಂಧಿ! Video ಇದೆ

Sharmitha Gowda in bikini
ಕಿರುತೆರೆ8 months ago

Geetha Serial Kannada: ನಿದ್ದೆ ಕದ್ದ ಚೋರಿ! ನಟಿ `ಭಾನುಮತಿ’ ಹಾಟ್‌ ಪೋಟೊಗಳಿಗೆ ಫ್ಯಾನ್ಸ್ ಫುಲ್ ಫಿದಾ

Kannada Serials
ಕಿರುತೆರೆ7 months ago

Kannada Serials TRP: 2ನೇ ಸ್ಥಾನದಲ್ಲಿ 2 ಧಾರಾವಾಹಿಗಳು; ಟಿಆರ್‌ಪಿ ರೇಸ್‌ನಲ್ಲಿಲ್ಲ ಭಾಗ್ಯಲಕ್ಷ್ಮೀ!

Bigg Boss- Saregamapa 20 average TRP
ಕಿರುತೆರೆ7 months ago

Kannada Serials TRP: ಏಳನೇ ಸ್ಥಾನಕ್ಕೆ ʻಅಮೃತಧಾರೆʼ ಕುಸಿತ; ಬಿಗ್‌ ಬಾಸ್‌-ಸರಿಗಮಪ ಟಿಆರ್‌ಪಿ ಎಷ್ಟು?

galipata neetu
ಕಿರುತೆರೆ6 months ago

Kanyadana Serial: ಕಿರುತೆರೆಗೆ ಮತ್ತೆ ಎಂಟ್ರಿ ಕೊಟ್ಟ ʻಗಾಳಿಪಟʼ ಖ್ಯಾತಿಯ ʻನೀತುʼ!

Kannada Serials
ಕಿರುತೆರೆ8 months ago

Kannada Serials TRP: ನಾಲ್ಕನೇ ಸ್ಥಾನಕ್ಕೆ ಕುಸಿತ ಕಂಡ ʻಸೀತಾ ರಾಮʼ; ಟಿಆರ್‌ಪಿ ರೇಸ್‌ಗೆ ʻಭಾಗ್ಯಲಕ್ಷ್ಮಿʼ ಬ್ಯಾಕ್‌!

Kannada Serials
ಕಿರುತೆರೆ8 months ago

Kannada Serials TRP: ಟಿಆರ್‌ಪಿಯಲ್ಲಿ ʻಭಾಗ್ಯಲಕ್ಷ್ಮೀʼ ಹವಾ; ʻಪುಟ್ಟಕ್ಕನ ಮಕ್ಕಳುʼ ಧಾರಾವಾಹಿಗೆ ಸಂಕಷ್ಟ!

Bigg Boss' dominates TRP; Sita Rama fell to the sixth position
ಕಿರುತೆರೆ7 months ago

Kannada Serials TRP: ಟಿಆರ್‌ಪಿಯಲ್ಲಿ ʻಬಿಗ್ ಬಾಸ್ʼದೇ ಮೇಲುಗೈ; 6ನೇ ಸ್ಥಾನಕ್ಕೆ ಕುಸಿದ ʻಸೀತಾ ರಾಮʼ

geetha serial Dhanush gowda engagement
ಕಿರುತೆರೆ5 months ago

Dhanush Gowda: ಗೀತಾ ಧಾರಾವಾಹಿ ನಟನ ನಿಶ್ಚಿತಾರ್ಥ; ಭವ್ಯಾಳ ಕಮೆಂಟ್‌ ಬಾಕ್ಸ್‌ ಆಫ್‌!

varun
ಕಿರುತೆರೆ6 months ago

Brindavana Serial: ʼಬೃಂದಾವನʼ ಧಾರಾವಾಹಿಯಲ್ಲಿ ದೊಡ್ಡ ಟ್ವಿಸ್ಟ್‌; ಪ್ರಮುಖ ಪಾತ್ರಧಾರಿಯೇ ಬದಲು

Kannada Serials
ಕಿರುತೆರೆ8 months ago

Kannada Serials TRP: ಟಿಆರ್‌ಪಿಯಲ್ಲಿ ಏರಿಕೆ ಕಂಡ ʻಅಮೃತಧಾರೆʼ; ʻಗಟ್ಟಿಮೇಳʼಕ್ಕೆ ನಾಲ್ಕನೇ ಸ್ಥಾನ!

Karnataka Rain
ಮಳೆ17 hours ago

Karnataka Rain : ಬಂಗಾಳ ಕೊಲ್ಲಿಯಲ್ಲಿ ವಾಯುಭಾರ ಕುಸಿತ; ಸಮುದ್ರಕ್ಕಿಳಿಯದಂತೆ ಮೀನುಗಾರರಿಗೆ ಎಚ್ಚರಿಕೆ

Karnataka Rain
ಮಳೆ2 days ago

Karnataka Rain : ಒಂದೇ ಮಳೆಗೆ ಹೊಳೆಯಂತಾದ ಬೆಂಗಳೂರು ರಸ್ತೆಗಳು! ಕಳಸದಲ್ಲೂ ಮುಂದುವರಿದ ಅಬ್ಬರ

Karnataka rain
ಮಳೆ2 days ago

Karnataka Rain : ವಿಜಯನಗರದಲ್ಲಿ ಸಿಡಿಲಿಗೆ ಜಾನುವಾರು ಬಲಿ; ಬೆಂಗಳೂರು ಸೇರಿ ಹಲವೆಡೆ ಭಾರಿ ಮಳೆ

Karnataka Rain
ಮಳೆ2 days ago

Karnataka Rain: ಧಾರಾಕಾರ ಮಳೆಗೆ ಕಾಂಪೌಂಡ್ ಕುಸಿದು 4 ಬೈಕ್‌ಗಳು ಜಖಂ; ಮದುವೆ ಮಂಟಪಕ್ಕೆ ನುಗ್ಗಿದ ನೀರು‌

Prajwal Revanna Case JDS calls CD Shivakumar pen drive gang
ರಾಜಕೀಯ3 days ago

Prajwal Revanna Case: CD ಶಿವಕುಮಾರ್ ಪೆನ್ ಡ್ರೈವ್ ಗ್ಯಾಂಗ್ ಎಂದ ಕುಟುಕಿದ ಜೆಡಿಎಸ್‌!

Karnataka weather Forecast
ಮಳೆ4 days ago

Karnataka Weather : ಮೈಸೂರು, ಮಂಡ್ಯ ಸೇರಿ ಈ 7 ಜಿಲ್ಲೆಗಳಲ್ಲಿ ವ್ಯಾಪಕ ಮಳೆ ಸಂಭವ

Dina Bhavishya
ಭವಿಷ್ಯ4 days ago

Dina Bhavishya : ಈ ರಾಶಿಯ ಪ್ರೇಮಿಗಳಿಗೆ ಮನೆಯಿಂದ ಸಿಗುತ್ತೆ ಗ್ರೀನ್‌ ಸಿಗ್ನಲ್‌

Karnataka Weather Forecast
ಮಳೆ5 days ago

Karnataka Weather : ಭಾರಿ ಮಳೆಗೆ ಕೊಟ್ಟೂರು ಬಸ್ ಸ್ಟ್ಯಾಂಡ್‌ ಜಲಾವೃತ; ‌ ತಾಯಿ-ಮಗ ಗ್ರೇಟ್‌ ಎಸ್ಕೇಪ್‌

Drowned in water
ಹಾಸನ5 days ago

Drowned in water : ಕೆರೆಯಲ್ಲಿ ಈಜಲು ಹೋದ ನಾಲ್ವರು ನೀರುಪಾಲು; ಓರ್ವ ಬಾಲಕ ಪಾರು

Suspicious Case
ಬೆಂಗಳೂರು5 days ago

Suspicious Case : ಬಾತ್‌ ರೂಂನಲ್ಲಿತ್ತು ಕಾಲೇಜು ಹುಡುಗಿ ಡೆಡ್‌ ಬಾಡಿ; ಕುತ್ತಿಗೆ ಕೊಯ್ದು ಸಾಯಿಸಿದವರು ಯಾರು?

ಟ್ರೆಂಡಿಂಗ್‌