Chess Olympiad | 30 ಆಟಗಾರರು ಕಣದಲ್ಲಿ, ಇದು ಸಾರ್ವಕಾಲಿಕ ದಾಖಲೆ - Vistara News

ಕ್ರೀಡೆ

Chess Olympiad | 30 ಆಟಗಾರರು ಕಣದಲ್ಲಿ, ಇದು ಸಾರ್ವಕಾಲಿಕ ದಾಖಲೆ

ಶುಕ್ರವಾರ ಆರಂಭವಾಗಲಿರುವ ೪೪ನೇ Chess Olympiadನಲ್ಲಿ ಭಾರತದ ೩೦ ಸ್ಪರ್ಧಿಗಳು ಕಣಕ್ಕೆ ಇಳಿಯಲಿದ್ದಾರೆ.

VISTARANEWS.COM


on

Chess Olympiad
ಮಹತ್ವದ, ಕುತೂಹಲಕರ ಸುದ್ದಿಗಾಗಿ ಫಾಲೊ ಮಾಡಿ
Koo

ಚೆನ್ನೈ: ಮುಂಬರುವ ೪೪ನೇ ಆವೃತ್ತಿಯ ಚೆಸ್ ಒಲಿಂಪಿಯಾಡ್‌ಗೆ (Chess Olympiad) ಭಾರತ ಆತಿಥ್ಯ ವಹಿಸುತ್ತಿದೆ. ಜುಲೈ ೨೮ರಿಂದ ಆಗಸ್ಟ್‌ ೧೦ವರೆಗೆ ಜಾಗತಿಕ ಮಟ್ಟದ ಈ ಕೂಟ ನಡೆಯಲಿದೆ. ವಿಶೇಷ ಎಂದರೆ ಆತಿಥೇಯ ಭಾರತ ಈ ಬಾರಿ ಆರು ತಂಡವನ್ನು ಕಣಕ್ಕೆ ಇಳಿಸುತ್ತಿದ್ದು, ಒಟ್ಟಾರೆ ೩೦ ಚೆಟ್‌ ಪಟುಗಳು ಪ್ರಶಸ್ತಿಗಾಗಿ ಸೆಣಸಾಡಲಿವೆ. ಇದು ಭಾರತ ಚೆಸ್‌ ಇತಿಹಾಸದಲ್ಲಿ ದಾಖಲೆಯಾಗಿದೆ.

ಮಹಾಬಲಿಪುರಮ್‌ನಲ್ಲಿ ಚೆಸ್ ಒಲಿಂಪಿಯಾಡ್‌ ನಡೆಯಲಿದ್ದು, ದಾಖಲೆಯ ೧೮೭ ದೇಶಗಳು ಪಾಲ್ಗೊಳ್ಳಲಿವೆ. ಇದರಲ್ಲಿ ೧೮೮ ತಂಡಗಳು ಓಪನ್ ವಿಭಾಗ ಹಾಗೂ ೧೬೨ ತಂಡಗಳು ಮಹಿಳಾ ವಿಭಾಗದಲ್ಲಿ ಪಾಲ್ಗೊಳ್ಳಲಿವೆ. ಅಂತೆಯೇ ಭಾರತ ಮೂರು ತಂಡಗಳು ಓಪನ್‌ ವಿಭಾಗ ಹಾಗೂ ೩ ತಂಡಗಳು ಮಹಿಳಾ ವಿಭಾಗದಲ್ಲಿ ಸ್ಪರ್ಧಿಸಲಿವೆ. ಪ್ರತಿಯೊಂದು ತಂಡದಲ್ಲಿ ೫ ಆಟಗಾರರು ಇರುತ್ತಾರೆ. ಇವರಲ್ಲಿ ನಾಲ್ವರು ಸ್ಪರ್ಧಾಕಣಕ್ಕೆ ಇಳಿಯಬಹುದಾಗಿದೆ.

ಚೆಸ್‌ ಒಲಿಂಪಿಯಾಡ್‌ ೧೧ ಸುತ್ತಿನ ಸ್ವಿಸ್ ಲೀಗ್‌ ಮಾದರಿಯಲ್ಲಿ ನಡೆಯಲಿದೆ. ಓಪನ್‌ ವಿಭಾಗದಲ್ಲಿ ಸ್ಪರ್ಧಿಸುವ ಭಾರತ ತಂಡಗಳು ೨, ೧೧ ಹಾಗೂ ೧೧ನೇ ಶ್ರೇಯಾಂಕ ಹೊಂದಿದೆ. ಈ ತಂಡಗಳಲ್ಲಿ ಇರುವ ಎಲ್ಲ ಆಟಗಾರರು ಗ್ರ್ಯಾಂಡ್‌ ಮಾಸ್ಟರ್‌ಗಳು ಎಂಬುದು ವಿಶೇಷ.

ಮಹಿಳೆಯರ ವಿಭಾಗದಲ್ಲಿ ಸ್ಪರ್ಧಿಸುವ ತಂಡಗಳು ೧, ೧೧ ಹಾಗೂ ೧೬ನೇ ಶ್ರೇಯಾಂಕ ಪಡೆದುಕೊಂಡಿವೆ.

ಭಾರತ ತಂಡ ೨೦೧೪ರ ನಾರ್ವೆ ಚೆಸ್ ಒಲಿಂಪಿಯಾಡ್‌ನ ಓಪನ್ ವಿಭಾಗದಲ್ಲಿ ಕಂಚಿನ ಪದಕ ಗೆದ್ದಿತ್ತು. ಅಂತೆಯೇ ೨೦೨೦ರ ಆನ್‌ಲೈನ್‌ ಒಲಿಂಪಿಯಾಡ್‌ನಲ್ಲಿ ಜಂಟಿಯಾಗಿ ಚಿನ್ನದ ಪದಕ ಬಾಚಿಕೊಂಡಿತ್ತು. ೨೦೨೧ ಆನ್‌ಲೈನ್‌ ಆವೃತ್ತಿಯಲ್ಲಿ ಕಂಚಿನ ಪದಕಕ್ಕೆ ಭಾಜನವಾಗಿತ್ತು.

ಇದನ್ನೂ ಓದಿ | ಭಾರತದ ಆತಿಥ್ಯದಲ್ಲಿ ನಡೆಯಲಿದೆ Chess Olympiad ಈ ಸ್ಪರ್ಧೆಯ ವಿಶೇಷತೆ ಏನು?

ಕ್ಷಣ ಕ್ಷಣದ ಮಾಹಿತಿಗಾಗಿ Vistara News FaceBook ಪೇಜ್ ಫಾಲೋ ಮಾಡಿ
ಮಹತ್ವದ ಮಾಹಿತಿಗಾಗಿ ವಿಸ್ತಾರ ನ್ಯೂಸ್ ಆ್ಯಪ್ ಉಚಿತವಾಗಿ ಡೌನ್ ಲೋಡ್ ಮಾಡಿಕೊಳ್ಳಿ: Andriod App | IOS App
Continue Reading
Click to comment

Leave a Reply

Your email address will not be published. Required fields are marked *

ಕ್ರೀಡೆ

India vs Ireland: ಇಂದು ನಡೆಯುವ ಭಾರತ-ಐರ್ಲೆಂಡ್​ ಪಂದ್ಯಕ್ಕೆ ಮಳೆ ಭೀತಿ ಇದೆಯೇ?

India vs Ireland: ನ್ಯೂಯಾರ್ಕ್​ನಲ್ಲಿ ಈ ಪಂದ್ಯ ಹಗಲು ನಡೆಯುವ ಕಾರಣ ಭಾಗಶಃ ಬಿಸಿಲಿನ ವಾತಾವರಣ ಇರಲಿದೆ. ಬೆಳಗ್ಗಿನ ಜಾವ ಕೊಂಚ ಮೋಡ ಕವಿದ ವಾತಾವರಣ ಕಂಡು ಬಂದರೂ ಕೂಡ ಪಂದ್ಯಕ್ಕೆ ಮಳೆ ಅಡ್ಡಿಪಡಿಸುವ ಯಾವುದೇ ಸಾಧ್ಯತೆಗಳಿಲ್ಲ ಎಂದು ಹವಾಮಾನ ಇಲಾಖೆ ತಿಳಿಸಿದೆ.

VISTARANEWS.COM


on

India vs Ireland
Koo

ನ್ಯೂಯಾರ್ಕ್​: ಇಂಗ್ಲೆಂಡ್​ ಮತ್ತು ಸ್ಕಾಟ್ಲೆಂಡ್​ ನಡುವೆ ನಿನ್ನೆ(ಮಂಗಳವಾರ) ನಡೆಯಬೇಕಿದ್ದ ಪಂದ್ಯ ಮಳೆಯಿಂದ ಫಲಿತಾಂಶ ಕಾಣದೆ ರದ್ದು ಗೊಂಡಿತ್ತು. ಹೀಗಾಗಿ ಇಂದು(ಬುಧವಾರ) ನಡೆಯುವ ಭಾರತ ಮತ್ತು ಐರ್ಲೆಂಡ್(India vs Ireland)​ ವಿರುದ್ಧದ ಪಂದ್ಯಕ್ಕೂ ಮಳೆ ಭೀತಿ(New York Weather Forecast) ಇದೆಯೇ ಎಂದು ಅಭಿಮಾನಿಗಳಿಗೆ ಆತಂಕವೊಂದು(T20 World Cup) ಶುರುವಾಗಿದೆ. ಪಂದ್ಯದ ಹವಾಮಾನ ವರದಿ ಹೀಗಿದೆ.

ಹವಾಮಾನ ವರದಿ

ನ್ಯೂಯಾರ್ಕ್​ನಲ್ಲಿ ಈ ಪಂದ್ಯ ಹಗಲು ನಡೆಯುವ ಕಾರಣ ಭಾಗಶಃ ಬಿಸಿಲಿನ ವಾತಾವರಣ ಇರಲಿದೆ. ಬೆಳಗ್ಗಿನ ಜಾವ ಕೊಂಚ ಮೋಡ ಕವಿದ ವಾತಾವರಣ ಕಂಡು ಬಂದರೂ ಕೂಡ ಪಂದ್ಯಕ್ಕೆ ಮಳೆ ಅಡ್ಡಿಪಡಿಸುವ ಯಾವುದೇ ಸಾಧ್ಯತೆಗಳಿಲ್ಲ ಎಂದು ಹವಾಮಾನ ಇಲಾಖೆ ತಿಳಿಸಿದೆ. ಪಂದ್ಯವು ಬೆಳಿಗ್ಗೆ ಮತ್ತು ಮಧ್ಯಾಹ್ನ ನಡೆಯವ ಕಾರಣ ಇಬ್ಬನಿಯ ಸಮಸ್ಯೆ ಕೂಡ ಕಾಣಸಿಗದು. ಹೀಗಾಗಿ ಪಂದ್ಯ ಸಂಪೂರ್ಣವಾಗಿ ನಡೆಯಲಿದೆ.

ಪಿಚ್​ ರಿಪೋರ್ಟ್​


ನಸೌ ಕ್ರಿಕೆಟ್​ ಸ್ಟೇಡಿಯಂನ ಪಿಚ್ ಅತ್ಯಂತ ಆಘಾತಕಾರಿಯಾಗಿ ವರ್ತಿಸುತ್ತಿದೆ. ಬ್ಯಾಟರ್​ಗಳು ಇಲ್ಲಿ ರನ್​ಗಳಿಸಲು ಪರದಾಡುತ್ತಿದ್ದಾರೆ. ಇದಕ್ಕೆ ಸೋಮವಾರ ನಡೆದಿದ್ದ ದಕ್ಷಿಣ ಆಫ್ರಿಕಾ ಮತ್ತು ಶ್ರೀಲಂಕಾ ನಡುವಣ ಪಂದ್ಯವೇ ಉತ್ತಮ ನಿದರ್ಶನ. ಈ ಪಂದ್ಯದಲ್ಲಿ ದಾಖಲೆಯ 127 ಎಸೆತಗಳು ಡಾಟ್​ ದಾಖಲಾಗಿತ್ತು. ಅಲ್ಲದೆ ಬೌನ್ಸರ್​ ಎಸೆತಗಳನ್ನು ಸರಿಯಾಗಿ ಗ್ರಹಿಸಿಕೊಳ್ಳಲು ಸಾಧ್ಯವಾಗದೆ ಬ್ಯಾಟರ್​ಗಳು ಚೆಂಡಿನೇಟು ತಿಂದಿದ್ದರು. ಔಟ್​ ಫೀಲ್ಡ್​ ಕೂಡ ಫೀಲ್ಡಿಂಗ್​ಗೆ ಅಷ್ಟು ಯೋಗ್ಯವಾಗಿಲ್ಲ. ಈ ಬಗ್ಗೆ ಕೋಚ್​ ರಾಹುಲ್​ ದ್ರಾವಿಡ್​ ಈಗಾಗಲೇ ಅಸಮಾಧಾನ ವ್ಯಕ್ತಪಡಿಸಿದ್ದಾರೆ. ಸಂಪೂರ್ಣವಾಗಿ ಜಾರುತ್ತಿದ್ದು ಆಟಗಾರರು ಗಾಯಗಳಾಗುವ ಸಾಧ್ಯತೆ ಅಧಿಕವಾಗಿ ಎಂದು ದ್ರಾವಿಡ್​ ಹೇಳಿದ್ದರು. ಬೌಲರ್​ಗಳಿಗೆ ಇದು ನೆಚ್ಚಿನ ತಾಣವಾಗಿದೆ.

ಇದನ್ನೂ ಓದಿ IPL 2025 Mega Auction: ಕೇವಲ ಇಷ್ಟು ಆಟಗಾರರ ರಿಟೇನ್​ಗೆ ಮಾತ್ರ ಅವಕಾಶ!

ಟಿ20 ಮುಖಾಮುಖಿ


ಉಭಯ ತಂಡಗಳು ಇದುವೆರೆಗೆ ಟಿ20 ಕ್ರಿಕೆಟ್​ನಲ್ಲಿ ಒಟ್ಟು 7 ಪಂದ್ಯಗಳಲ್ಲಿ ಮುಖಾಮುಖಿಯಾಗಿವೆ. ಎಲ್ಲ ಪಂದ್ಯಗಳನ್ನು ಭಾರತ ಗೆದ್ದಿದೆ. ಇದರಲ್ಲೊಂದು ಟಿ20 ವಿಶ್ವಕಪ್​ ಪಂದ್ಯವಾಗಿದೆ. ಈ ಲೆಕ್ಕಾಚಾರದಲ್ಲಿ ಭಾರತ ಬಲಿಷ್ಠವಾಗಿ ಗೋಚರಿಸಿದರೂ ಕೂಡ ಐರ್ಲೆಂಡ್​ ಸವಾಲನ್ನು ಹಗುರವಾಗಿ ಕಾಣುವಂತಿಲ್ಲ. ಏಕೆಂದರೆ ಬಲಿಷ್ಠ ತಂಡಗಳು ಕೂಡ ದುರ್ಬಲ ತಂಡದ ವಿರುದ್ಧ ಸೋತ ಹಲವು ನಿದರ್ಶನಗಳಿವೆ. ಹೀಗಾಗಿ ಪ್ರತಿ ಹೆಚ್ಚುಗೂ ಎಚ್ಚರಿಕೆಯಿಂದ ಆಡಬೇಕು.

ಪಂದ್ಯದ ಪ್ರಸಾರ


ನ್ಯೂಯಾರ್ಕ್​ನಲ್ಲಿ ಈ ಪಂದ್ಯ ಹಗಲು ನಡೆದರೂ ಕೂಡ ಭಾರತದಲ್ಲಿ ರಾತ್ರಿ 8 ಗಂಟೆಗೆ ಪಂದ್ಯ ಪ್ರಸಾರಗೊಳ್ಳಲಿದೆ. ಸ್ಟಾರ್​ ಸ್ಪೋರ್ಟ್ಸ್​ ಮತ್ತು ಡಿಡಿ ದೂರದರ್ಶನದಲ್ಲಿ ಪಂದ್ಯಗಳು ನೇರಪ್ರಸಾರ ಇರಲಿದೆ. ಪಂದ್ಯದ ಲೈವ್ ಸ್ಟ್ರೀಮಿಂಗ್ ಡಿಸ್ನಿ + ಹಾಟ್‌ಸ್ಟಾರ್‌ ಮೊಬೈಲ್​ನಲ್ಲಿ ಉಚಿತವಾಗಿ ವೀಕ್ಷಿಸಬಹುದು.

ಉಭಯ ತಂಡಗಳು


ಭಾರತ: ರೋಹಿತ್ ಶರ್ಮಾ (ನಾಯಕ), ಹಾರ್ದಿಕ್ ಪಾಂಡ್ಯ (ಉಪನಾಯಕ), ಯಶಸ್ವಿ ಜೈಸ್ವಾಲ್, ವಿರಾಟ್ ಕೊಹ್ಲಿ, ಸೂರ್ಯಕುಮಾರ್ ಯಾದವ್, ರಿಷಭ್ ಪಂತ್ (ವಿಕೆಟ್​ ಕೀಪರ್​), ಸಂಜು ಸ್ಯಾಮ್ಸನ್ (ವಿಕೆಟ್​ ಕೀಪರ್​), ಶಿವಂ ದುಬೆ, ರವೀಂದ್ರ ಜಡೇಜಾ, ಅಕ್ಷರ್ ಪಟೇಲ್, ಕುಲದೀಪ್ ಯಾದವ್, ಯುಜ್ವೇಂದ್ರ ಚಾಹಲ್, ಅರ್ಶದೀಪ್​ ಸಿಂಗ್​, ಜಸ್​ಪ್ರೀತ್​ ಬುಮ್ರಾ, ಮೊಹಮ್ಮದ್​ ಸಿರಾಜ್.

ಐರ್ಲೆಂಡ್​: ಪಾಲ್ ಸ್ಟರ್ಲಿಂಗ್ (ನಾಯಕ), ಮಾರ್ಕ್ ಅಡೈರ್, ರಾಸ್ ಅಡೈರ್, ಆಂಡ್ರ್ಯೂ ಬಲ್ಬಿರ್ನಿ, ಕರ್ಟಿಸ್ ಕ್ಯಾಂಫರ್, ಗರೆಥ್ ಡೆಲಾನಿ, ಜಾರ್ಜ್ ಡಾಕ್ರೆಲ್, ಗ್ರಹಾಂ ಹ್ಯೂಮ್, ಜೋಶ್ ಲಿಟಲ್, ಬ್ಯಾರಿ ಮೆಕಾರ್ಥಿ, ನೀಲ್ ರಾಕ್ (ವಿಕೆಟ್ ಕೀಪರ್), ಹ್ಯಾರಿ ಟೆಕ್ಟರ್, ಲಾರ್ಕನ್ ಟಕರ್ (ವಿಕೆಟ್ ಕೀಪರ್), ಬೆನ್ ವೈಟ್ ಮತ್ತು ಕ್ರೇಗ್ ಯಂಗ್.

Continue Reading

ಕ್ರೀಡೆ

Novak Djokovic: ಫ್ರೆಂಚ್ ಓಪನ್‌ ಟೂರ್ನಿಯಿಂದ ಹಿಂದೆ ಸರಿದ ಜೊಕೊವಿಕ್

Novak Djokovic: ಹಾಲಿ ಚಾಂಪಿಯನ್‌ ಇಗಾ ಸ್ವಿಯಾಟೆಕ್‌ ಮತ್ತು ಅಮೆರಿಕದ ಕೊಕೊ ಗಾಫ್ ಫ್ರೆಂಚ್‌ ಓಪನ್‌ ಮಹಿಳಾ ಸಿಂಗಲ್ಸ್​ನ ಕ್ವಾರ್ಟರ್‌ ಫೈನಲ್‌ ಪಂದ್ಯದಲ್ಲಿ ಗೆಲುವು ಸಾಧಿಸಿ ಸೆಮಿ ಫೈನಲ್​ ಪ್ರವೇಶಿಸಿದ್ದಾರೆ. ಸೆಮಿ ಫೈನಲ್​ನಲ್ಲಿ ಉಭಯ ಆಟಗಾರ್ತಿಯರು ಮುಖಾಮುಖಿಯಾಗಲಿದ್ದಾರೆ. ಈ ಪಂದ್ಯ ಜೂನ್​ 6, ಗುರುವಾರದಂದು ನಡೆಯಲಿದೆ.

VISTARANEWS.COM


on

Novak Djokovic
Koo

ಪ್ಯಾರಿಸ್​: ಸರ್ಬಿಯಾದ ಪ್ರಸಿದ್ಧ ಟೆನ್ನಿಸ್ ಆಟಗಾರ, ವಿಶ್ವ ನಂ.1 ನೊವಾಕ್ ಜೊಕೊವಿಕ್(Novak Djokovic) ಅವರು ಬಲ ಮೊಣಕಾಲಿನ ಗಾಯದಿಂದಾಗಿ ಪ್ರಸಕ್ತ ಸಾಗುತ್ತಿರುವ ಫ್ರೆಂಚ್ ಓಪನ್‌(French Open 2024) ಟೂರ್ನಿಯಿಂದ ಹಿಂದೆ ಸರಿದಿದ್ದಾರೆ. ತಮ ಅಲಭ್ಯವನ್ನು ಜೊಕೊವಿಕ್​ ಮಂಗಳವಾರ ಖಚಿತಪಡಿಸಿದರು.

ಈ ಕೂಟದಲ್ಲಿ ಹಾಲಿ ಚಾಂಪಿಯನ್ ಆಗಿರುವ ಜೊಕೊವಿಕ್ ಐದು ಸೆಟ್‌ಗಳು ಮತ್ತು 4 1/2 ಗಂಟೆಗಳಿಗೂ ಹೆಚ್ಚು ಕಾಲ ನಡೆದ ಫ್ರಾನ್ಸಿಸ್ಕೊ ​​ಸೆರುಂಡೊಲೊ ವಿರುದ್ಧದ ನಾಲ್ಕನೇ ಸುತ್ತಿನ ಪಂದ್ಯದಲ್ಲಿ ಗಾಯಗೊಂಡಿದ್ದರು. ಗಾಯದ ನಡುವೆಯೂ ಅವರು ತೀವ್ರ ಹೋರಾಟ ನಡೆಸಿ ಗೆಲುವು ಸಾಧಿಸಿದ್ದರು. ಪಂದ್ಯದ ಬಳಿಕ MRI ಪರೀಕ್ಷೆಗೆ ಒಳಪಟ್ಟಿದ್ದ ವೇಳೆ ಗಾಯದ ತೀವ್ರತೆ ಅರಿವಿಗೆ ಬಂದಿದೆ. ಅಂತಿಮವಾಗಿ ವೈದ್ಯರ ಸೂಚನೆ ಮೇರೆಗೆ ಟೂರ್ನಿಯಿಂದ ಹೊರ ನಡೆದಿದ್ದಾರೆ.

24 ಬಾರಿಯ ಗ್ರ್ಯಾಂಡ್ ಸ್ಲಾಮ್ ಚಾಂಪಿಯನ್ ಜೋಕೊ ಎರಡು ಬಾರಿ ಫ್ರೆಂಚ್ ಓಪನ್ ರನ್ನರ್ ಅಪ್ ಕ್ಯಾಸ್ಪರ್ ರೂಡ್ ವಿರುದ್ಧ ಬುಧವಾರ ಕ್ವಾರ್ಟರ್ ಫೈನಲ್‌ನಲ್ಲಿ ಕಣಕ್ಕಿಳಿಬೇಕಿತ್ತು. ಇದೀಗ ಜೋಕೊ ಹಿಂದೆ ಸರಿದ ಕಾರಣ ರೂಡ್​ ವಾಕ್​ ಓವರ್​ ಪಡೆದು ಸೆಮಿಫೈನಲ್​ ಪ್ರವೇಶಿಸಿದ್ದಾರೆ. ಸೆಮಿಫೈನಲ್​ ಪಂದ್ಯದಲ್ಲಿ ನಂ. 4 ಅಲೆಕ್ಸಾಂಡರ್ ಜ್ವೆರೆವ್ ಅಥವಾ ನಂ. 11 ಅಲೆಕ್ಸ್ ಡಿ ಮಿನೌರ್‌ ನಡುವಿನ ವಿಜೇತರನ್ನು ಎದುರಿಸಲಿದ್ದಾರೆ. 37 ವರ್ಷದ ಜೊಕೊವಿಕ್​ ಈ ವರ್ಷವೂ ಕೂಟ ಚಾಂಪಿಯನ್​ ಪಟ್ಟ ಅಲಂಕರಿಸಿ ಪ್ರಶಸ್ತಿಯನ್ನು ಉಳಿಸುವ ಯೋಜನೆಯಲ್ಲಿದ್ದರು. ಆದರೆ ಅವರ ಈ ಕನಸಿಗೆ ಗಾಯ ಅಡ್ಡಗಾಲಿಕ್ಕಿತು.

ಇದನ್ನೂ ಓದಿ Australian Open 2024: ಫೆಡರರ್ ದಾಖಲೆ ಸರಿಗಟ್ಟಿದ ನೊವಾಕ್ ಜೊಕೊವಿಕ್

ಗಾಫ್-ಸ್ವಿಯಾಟೆಕ್‌ ಸೆಮಿ ಪ್ರವೇಶ


ಹಾಲಿ ಚಾಂಪಿಯನ್‌ ಇಗಾ ಸ್ವಿಯಾಟೆಕ್‌ ಮತ್ತು ಅಮೆರಿಕದ ಕೊಕೊ ಗಾಫ್ ಫ್ರೆಂಚ್‌ ಓಪನ್‌ ಮಹಿಳಾ ಸಿಂಗಲ್ಸ್​ನ ಕ್ವಾರ್ಟರ್‌ ಫೈನಲ್‌ ಪಂದ್ಯದಲ್ಲಿ ಗೆಲುವು ಸಾಧಿಸಿ ಸೆಮಿ ಫೈನಲ್​ ಪ್ರವೇಶಿಸಿದ್ದಾರೆ. ಸೆಮಿ ಫೈನಲ್​ನಲ್ಲಿ ಉಭಯ ಆಟಗಾರ್ತಿಯರು ಮುಖಾಮುಖಿಯಾಗಲಿದ್ದಾರೆ. ಈ ಪಂದ್ಯ ಜೂನ್​ 6, ಗುರುವಾರದಂದು ನಡೆಯಲಿದೆ.

ಇಂದು(ಮಂಗಳವಾರ) ನಡೆದ ಮಹಿಳಾ ಸಿಂಗಲ್ಸ್​ ಕ್ವಾರ್ಟರ್​ ಫೈನಲ್​ನಲ್ಲಿ ಸ್ವಿಯಾಟೆಕ್ ಅವರು ವಿಂಬಲ್ಡನ್ ಚಾಂಪಿಯನ್ ಮಾರ್ಕೆಟಾ ವೊಂಡ್ರೊಸೊವಾ ಅವರನ್ನು 6-0, 6-2 ನೇರ ಸೆಟ್‌ಗಳಿಂದ ಸೋಲಿಸಿದರು. ದಿನ ಮತ್ತೊಂದು ಕ್ವಾರ್ಟರ್​ ಫೈನಲ್​ ಪಂದ್ಯದಲ್ಲಿ ಮೂರನೇ ಶ್ರೇಯಾಂಕದ ಅಮೆರಿಕದ ಕೊಕೊ ಗಾಫ್ ಅವರು ಓನ್ಸ್ ಜಬೇರ್ ವಿರುದ್ಧ ಮೂರು ಸುತ್ತುಗಳ ಮ್ಯಾರಥಾನ್​ ಹೋರಾಟದಲ್ಲಿ 4-6 6-2 6-3 ಅಂತರದಿಂದ ಗೆದ್ದು ಬೀಗಿದರು.

Continue Reading

ಕ್ರಿಕೆಟ್

Hanuma Vihari: 2 ತಿಂಗಳ ಬಳಿಕ ನಿರಾಕ್ಷೇಪಣಾ ಪತ್ರ ಪಡೆದ ಹನುಮ ವಿಹಾರಿ

Hanuma Vihari: ಎರಡು ತಿಂಗಳಿಂದ ನಾನು ಎನ್‌ಒಸಿ ಕೇಳುತ್ತಿದ್ದೆ. ಎಸಿಎಗೆ ನಾಲ್ಕು ಬಾರಿ ಮೇಲ್ ಮಾಡಿದ್ದೇನೆ. ಆದರೂ ನೀಡಿರಲಿಲ್ಲ. ಈಗ ರಾಜ್ಯದಲ್ಲಿ ರಾಜಕೀಯ ಚಿತ್ರಣ ಬದಲಾಗಿದೆ. ಹೀಗಾಗಿ, ತಕ್ಷಣ ಎನ್‌ಒಸಿ ನೀಡಿದ್ದಾರೆ’ ಎಂದು ವಿಹಾರಿ ತಮ್ಮ ಟ್ವಿಟರ್​ ಎಕ್ಸ್​ ಖಾತೆಯಲ್ಲಿ ಬರೆದುಕೊಂಡಿದ್ದಾರೆ

VISTARANEWS.COM


on

Hanuma Vihari
Koo

ಆಂಧ್ರ ಪ್ರದೇಶ: ಟೀಮ್​ ಇಂಡಿಯಾದ ಟೆಸ್ಟ್‌ ಸ್ಪೆಷಲಿಸ್ಟ್‌ ಹನುಮ ವಿಹಾರಿ(Hanuma Vihari) ಕೊನೆಗೂ 2 ತಿಂಗಳ ಬಳಿಕ ಆಂಧ್ರ ಕ್ರಿಕೆಟ್‌ ಸಂಸ್ಥೆಯಿಂದ(Andhra Cricket Association) ನಿರಾಕ್ಷೇಪಣಾ ಪತ್ರವನ್ನು (NOC ) ಪಡೆದಿದ್ದಾರೆ. ಈ ವಿಚಾರವನ್ನು ವಿಹಾರಿ ಮಂಗಳವಾರ ಅಧಿಕೃತವಾಗಿ ಪ್ರಕಟಿಸಿದ್ದಾರೆ.

2023-24ರ ಸಾಲಿನ ರಣಜಿ ಟ್ರೋಫಿ ಟೂರ್ನಿ ಸಂದರ್ಭದಲ್ಲಿ ನಾಯಕತ್ವದಿಂದ ಕೆಳಗಿಳಿಸಿದ ವಿಚಾರವಾಗಿ ವಿಹಾರಿ ಎಸಿಎ ವಿರುದ್ಧ ಗಂಭೀರ ಆರೋಪ ಮಾಡಿದ್ದರು. ತನ್ನನ್ನು ನಿರ್ದಾಕ್ಷಿಣ್ಯವಾಗಿ ನಾಯಕತ್ವದಿಂದ ಕೆಳಗಿಳಿಸಿ ಅವಮಾನಿಸಿದೆ. ಮುಂದೆಂದೂ ನಾನು ಆಂಧ್ರ ತಂಡಕ್ಕೆ ಆಡುವುದಿಲ್ಲ ಎಂದು ಹೇಳಿದ್ದರು. ಈ ಸಂಬಂಧ ವಿಹಾರಿ ಅವರಿಗೆ ಎಸಿಎ ನೋಟಿಸ್ ನೀಡಿತ್ತು.‌

ಅವಮಾನಿಸಿದ ಕ್ರಿಕೆಟ್​ ಬೋರ್ಡ್​ ತೊರೆದು ಬೇರೆ ರಾಜ್ಯದ ಪರ ಆಡಲು ನಿರಾಕ್ಷೇಪಣಾ ಪತ್ರಕ್ಕೆ ಅರ್ಜಿ ಸಲ್ಲಿಸಿದ್ದರು. ಆದರೆ, ಈ ಪತ್ರವನ್ನು ನೀಡಲು ಎಸಿಎ ತಡ ಮಾಡಿತ್ತು. ಇದೀಗ ಕೊನೆಗೂ 2 ತಿಂಗಳ ಬಳಿಕ ವಿಹಾರಿಗೆ ನಿರಾಕ್ಷೇಪಣಾ ಪತ್ರ ನೀಡಿದೆ(Vihari receives NOC from ACA). ಹೀಗಾಗಿ ಮುಂದಿನ ಆವೃತ್ತಿಯಲ್ಲಿ ವಿಹಾರಿ ಬೇರೆ ರಾಜ್ಯದ ಪರ ಕ್ರಿಕೆಟ್​ ಆಡಬಹುದಾಗಿದೆ.

‘ಎರಡು ತಿಂಗಳಿಂದ ನಾನು ಎನ್‌ಒಸಿ ಕೇಳುತ್ತಿದ್ದೆ. ಎಸಿಎಗೆ ನಾಲ್ಕು ಬಾರಿ ಮೇಲ್ ಮಾಡಿದ್ದೇನೆ. ಆದರೂ ನೀಡಿರಲಿಲ್ಲ. ಈಗ ರಾಜ್ಯದಲ್ಲಿ ರಾಜಕೀಯ ಚಿತ್ರಣ ಬದಲಾಗಿದೆ. ಹೀಗಾಗಿ, ತಕ್ಷಣ ಎನ್‌ಒಸಿ ನೀಡಿದ್ದಾರೆ’ ಎಂದು ವಿಹಾರಿ ತಮ್ಮ ಟ್ವಿಟರ್​ ಎಕ್ಸ್​ ಖಾತೆಯಲ್ಲಿ ಬರೆದುಕೊಂಡಿದ್ದಾರೆ.

ವಿಹಾರಿ ಅವರು 2024-25ರ ಋತುವಿನಲ್ಲಿ ಬಿಸಿಸಿಐಗೆ ಸಂಯೋಜಿತವಾಗಿರುವ ಯಾವುದೇ ತಂಡವನ್ನು ಪ್ರತಿನಿಧಿಸಲು ಆಂಧ್ರ ಕ್ರಿಕೆಟ್ ಸಂಸ್ಥೆಯಿಂದ ಯಾವುದೇ ಅಡೆ ತಡೆಗಳಿಲ್ಲ ಎಂದು ಎಸಿಎ ಕಾರ್ಯದರ್ಶಿ ಗೋಪಿನಾಥ್‌ ರೆಡ್ಡಿ ಎನ್‌ಒಸಿಯಲ್ಲಿ ಉಲ್ಲೇಖಿಸಿದ್ದಾರೆ.

ಇದನ್ನೂ ಓದಿ Hanuma Vihari: ಹನುಮ ವಿಹಾರಿಗೆ ಶೋಕಾಸ್‌ ನೋಟಿಸ್‌ ನೀಡಿದ ಎಸಿಎ

ಹನುಮ ವಿಹಾರಿ ಅವರು ತಮ್ಮ ಇನ್​ಸ್ಟಾಗ್ರಾಮ್​ ಖಾತೆಯಲ್ಲಿ ಪೋಸ್ಟ್ ಮಾಡಿ, ಬಂಗಾಳ ವಿರುದ್ಧದ ಮೊದಲ ಪಂದ್ಯದಲ್ಲಿ ನಾನು ತಂಡದ ನಾಯಕನಾಗಿದ್ದೆ. ಆಟದ ಸಮಯದಲ್ಲಿ ನಾನು 17 ನೇ ಆಟಗಾರನ ಮೇಲೆ ಕೂಗಾಡಿದ್ದೆ. ಅವನು ತನ್ನ ತಂದೆಗೆ (ರಾಜಕಾರಣಿಯಾಗಿದ್ದ) ದೂರು ನೀಡಿದ್ದ, ಪ್ರತಿಯಾಗಿ ಅವರ ತಂದೆ ನನ್ನ ವಿರುದ್ಧ ಕ್ರಮ ಕೈಗೊಳ್ಳುವಂತೆ ಅಸೋಸಿಯೇಷನ್​ಗೆ ಕೇಳಿದರು. ಬಂಗಾಳ ವಿರುದ್ದದ ಪಂದ್ಯದಲ್ಲಿ ನಾವು ಗೆದ್ದರೂ, ನನ್ನ ಯಾವುದೇ ತಪ್ಪು ಇಲ್ಲದ ಹೊರತಾಗಿಯೂ ರಾಜೀನಾಮೆ ಕೊಡಲು ನನ್ನಲ್ಲಿ ಅಸೋಸಿಯೇಶನ್​ ಕೇಳಿಕೊಂಡಿತು. ನಾನು ವೈಯಕ್ತಿಕವಾಗಿ ಆ ಆಟಗಾರನಿಗೆ ಏನೂ ಹೇಳಿರಲಿಲ್ಲ. ಆದರೆ ಕಳೆದ ಏಳು ವರ್ಷಗಳಲ್ಲಿ ಐದು ಬಾರಿ ತಂಡವನ್ನು ನಾಕೌಟ್​ಗೆ ತಲುಪಿಸಿದ, ತಂಡಕ್ಕೆ ಎಲ್ಲವನ್ನೂ ಕೊಟ್ಟ ಆಟಗಾರನಿಗಿಂತ ಆ ಆಟಗಾರನೇ ಮಂಡಳಿಗೆ ಪ್ರಿಯವಾದ. ನಾನು ಮುಜುಗರ ಅನುಭವಿಸಿದೆ. ಇನ್ನೆಂದೂ ನಾನು ಆಂಧ್ರಪ್ರದೇಶದ ಪರ ಆಡಲಾರೆ ಎಂದು ಹೇಳಿದ್ದರು. ಇದೇ ವಿಚಾರವಾಗಿ ವಿಹಾರಿ ವಿರುದ್ಧ ಎಸಿಎ ನೋಟಿಸ್‌ ಜಾರಿ ಮಾಡಿತ್ತು.

ವಿಹಾರಿ ಮಾಡಿದ ಆರೋಪಗಳ ಬಗ್ಗೆ ಪ್ರತಿಕ್ರಿಯೆ ನೀಡಿದ್ದ ಎಸಿಎ, ವಿಹಾರಿ ನಾಯಕತ್ವದ ನಿರ್ಗಮನವು ವೃತ್ತಿಪರ ಪರಿಗಣನೆಯ ಪರಿಣಾಮವಾಗಿದೆಯೇ ಹೊರತು ರಾಜಕೀಯ ಹಸ್ತಕ್ಷೇಪವಲ್ಲ, ವಿಹಾರಿ ಆಟಗಾರರನ್ನು ಬೆದರಿಸಿ ಸಹಿ ಮಾಡಿಸಿದ್ದಾರೆ ಎಂದು ಆಂಧ್ರ ಕ್ರಿಕೆಟ್ ಸಂಸ್ಥೆ ಆರೋಪ ಮಾಡಿತ್ತು. 

Continue Reading

ಕ್ರಿಕೆಟ್

Election Results 2024: ಪಶ್ಚಿಮ ಬಂಗಾಳದಲ್ಲಿ ಮಾಜಿ ಕ್ರಿಕೆಟಿಗ ಕೀರ್ತಿ ಆಜಾದ್​ಗೂ ಜಯಭೇರಿ

Election Results 2024: ಭಾರತೀಯ ಚುನಾವಣಾ ಆಯೋಗದ (ಇಸಿಐ) ಪ್ರಕಾರ, ಟಿಎಂಸಿ ಅಭ್ಯರ್ಥಿ ಕೀರ್ತಿ ಆಜಾದ್ 7,20,667 ಮತಗಳನ್ನು ಪಡೆದರೆ, ಬಿಜೆಪಿ ಅಭ್ಯರ್ಥಿ ದಿಲೀಪ್ ಘೋಷ್ 5,82,686 ಮತಗಳನ್ನು ಪಡೆದರು. ಈ ಮೂಲಕ 1,37,981 ಮತಗಳ ಅಂತರದಿಂದ ಆಜಾದ್​ ಗೆಲುವು ಸಾಧಿಸಿದರು.

VISTARANEWS.COM


on

Election Results 2024
Koo

ಕೋಲ್ಕತ್ತಾ: ಪಶ್ಚಿಮ ಬಂಗಾಳದಲ್ಲಿ(West Bengal) ಯೂಸುಫ್ ಪಠಾಣ್ ಮಾತ್ರವಲ್ಲದೆ ಮತ್ತೋರ್ವ ಭಾರತದ ಮಾಜಿ ಕ್ರಿಕೆಟಿಗ ಕೀರ್ತಿ ಆಜಾದ್(Kirti Azad) ಕೂಡ ಟಿಎಂಸಿ(TMC) ಪರ ಗೆಲುವು ಕಂಡಿದ್ದಾರೆ. ಬರ್ಧಮಾನ್-ದುರ್ಗಾಪುರ ಕ್ಷೇತ್ರದಲ್ಲಿ ಕಣಕ್ಕಿಳಿದ್ದ ಅವರು ಬಿಜೆಪಿ ಅಭ್ಯರ್ಥಿ ದಿಲೀಪ್ ಘೋಷ್(Dilip Ghosh) ಅವರನ್ನು ಸೋಲಿಸುವಲ್ಲಿ(Election Results 2024) ಯಶಸ್ವಿಯಾಗಿದ್ದಾರೆ.

ಭಾರತೀಯ ಚುನಾವಣಾ ಆಯೋಗದ (ಇಸಿಐ) ಪ್ರಕಾರ, ಟಿಎಂಸಿ ಅಭ್ಯರ್ಥಿ ಕೀರ್ತಿ ಆಜಾದ್ 7,20,667 ಮತಗಳನ್ನು ಪಡೆದರೆ, ಬಿಜೆಪಿ ಅಭ್ಯರ್ಥಿ ದಿಲೀಪ್ ಘೋಷ್ 5,82,686 ಮತಗಳನ್ನು ಪಡೆದರು. ಈ ಮೂಲಕ 1,37,981 ಮತಗಳ ಅಂತರದಿಂದ ಆಜಾದ್​ ಗೆಲುವು ಸಾಧಿಸಿದರು. ಮಾಜಿ ಕ್ರಿಕೆಟಿಗ ಕೀರ್ತಿ ಆಜಾದ್ ಈ ಹಿಂದೆ ಭಾರತೀಯ ರಾಷ್ಟ್ರೀಯ ಕಾಂಗ್ರೆಸ್ (ಐಎನ್‌ಸಿ) ಪಕ್ಷವನ್ನು ಪ್ರತಿನಿಧಿಸಿದ್ದರು. ನವೆಂಬರ್ 2021ರಲ್ಲಿ ಟಿಎಂಸಿ ಪಕ್ಷವನ್ನು ಸೇರಿದರು. ಇದೀಗ ಲೋಕ ಸಮರ ಗೆದ್ದು ಬೀಗಿದ್ದಾರೆ.

85 ಸಾವಿರ ಮತಗಳ ಅಂತರದಿಂದ ಗೆದ್ದು ಬೀಗಿದ ಪಠಾಣ್


ಯೂಸುಫ್ ಪಠಾಣ್(Yusuf Pathan) ಅವರು ಪಶ್ಚಿಮ ಬಂಗಾಳದ ಬಹರಂಪುರ ಕ್ಷೇತ್ರದಿಂದ ಲೋಕಸಭಾ ಚುನಾವಣೆಯಲ್ಲಿ ಭರ್ಜರಿ ಗೆಲುವು ಸಾಧಿಸಿದ್ದಾರೆ. ಟಿಎಂಸಿ(TMC) ಪಕ್ಷದಿಂದ ಸ್ಪರ್ಧಿಸಿದ್ದ ಯೂಸುಫ್, ತಮ್ಮ ಚೊಚ್ಚಲ ಪ್ರಯತ್ನದಲ್ಲೇ ಕಾಂಗ್ರೆಸ್ ಪಕ್ಷದ ಹಾಲಿ ಹಾಗೂ 5 ಬಾರಿಯ ಸಂಸದರಾಗಿದ್ದ ಅಧೀರ್ ರಂಜನ್ ಚೌಧರಿ(Adhir Chowdhury)ಯನ್ನು ಮಣಿಸಿದ್ದಾರೆ. ಯೂಸುಫ್ ಪಠಾಣ್ 5,18,066 ಮತಗಳನ್ನು ಪಡೆದರೆ, ತಮ್ಮ ಸಮೀಪದ ಪ್ರತಿಸ್ಪರ್ಧಿ ರಂಜನ್ ಚೌಧರಿ 4,32,340 ಮತಗಳನ್ನು ಮಾತ್ರ ಪಡೆದರು. ಈ ಮೂಲಕ ಯೂಸುಫ್ ಪಠಾಣ್ 85,726 ಮತಗಳ ಅಂತರದಿಂದ ಗೆದ್ದು ಬೀಗಿದರು.

ಇದನ್ನೂ ಓದಿ AP Election Results 2024: ಆಂಧ್ರದಲ್ಲಿ ಮತ್ತೊಮ್ಮೆ ಟಿಡಿಪಿ ಮ್ಯಾಜಿಕ್‌; ಆಡಳಿತ ವಿರೋಧಿ ಅಲೆಗೆ ಕೊಚ್ಚಿಹೋದ ಜಗನ್ ಮೋಹನ್ ರೆಡ್ಡಿ

ಗೆಲುವಿನ ಬಳಿಕ ಮಾತನಾಡಿದ ಯೂಸುಫ್, ನನಗೆ ಸಂತೋಷವಾಗಿದೆ, ಇದು ನನ್ನ ಬೆಂಬಲಿಗರ ಮತ್ತು ಕಾರ್ಯಕರ್ತರ ಗೆಲುವು. ಇದಕ್ಕಾಗಿ ನಿಮ್ಮೆಲ್ಲರನ್ನು ನಾನು ಅಭಿನಂದಿಸುತ್ತೇನೆ. ಟಿಎಂಸಿ ಮುಖ್ಯಸ್ಥೆ ಮಮತಾ ಬ್ಯಾನರ್ಜಿ ಜತೆ ಈಗಾಗಲೇ ಮಾತುಕತೆ ನಡೆಸಿದ್ದೇನೆ. ನಾನು ಮೊದಲು ಕ್ರೀಡಾ ಅಕಾಡೆಮಿ ಮಾಡುತ್ತೇನೆ, ಇದರಿಂದ ಯುವ ಪ್ರತಿಭೆಗಳು ವೃತ್ತಿಜೀವನ ಕಟ್ಟಿಕೊಳ್ಳಬಹುದು. ಕೈಗಾರಿಕೆಗಳಿಗೂ ಕೆಲಸ ಕೊಡಿಸುತ್ತೇನೆ. ನಾನು ಇಲ್ಲಿಯೇ ವಾಸಿಸುತ್ತೇನೆ ಮತ್ತು ನನ್ನ ಕ್ಷೇತ್ರದ ಜನರ ಸೇವೆಗಾಗಿ ಸದಾ ಸಿದ್ಧನಿರುತ್ತೇನೆ” ಎಂದು ಪಠಾಣ್​ ಹೇಳಿದರು.

400 ಸೀಟ್‌ ಗಳಿಸುವ ಎನ್‌ಡಿಎ ಕನಸು ನುಚ್ಚು ನೂರಾದದ್ದು ಹೇಗೆ?


ಉತ್ತರ ಪ್ರದೇಶದ ಜಾತಿ ಸಮೀಕರಣ

ಬಿಜೆಪಿ ಈ ಬಾರಿ ಉತ್ತರ ಪ್ರದೇಶದಲ್ಲಿ ಭಾರಿ ಹೊಡೆತ ತಿಂದಿದೆ. ಕಳೆದ ಸಲಕ್ಕಿಂತ 30ಕ್ಕೂ ಅಧಿಕ ಸ್ಥಾನಗಳನ್ನು ಕಳೆದುಕೊಂಡಿದೆ. ಇದಕ್ಕೆ ಈ ರಾಜ್ಯದ ಜಾತಿ ರಾಜಕೀಯವನ್ನು ಬಿಜೆಪಿ ಕಡೆಗಣಿಸಿದ್ದೇ ಕಾರಣ ಎನ್ನಲಾಗುತ್ತಿದೆ. ರಾಮ ಮಂದಿರದ ಅಲೆ ಏರಿ ಬಂದ ಬಿಜೆಪಿ, ಹಿಂದುತ್ವದ ಮೂಲಕ ಗೆಲ್ಲಬಹುದು ಎಂದುಕೊಂಡಿತು. ಆದರೆ ಇಲ್ಲಿ ಹಿಂದುತ್ವ ರಾಜಕಾರಣಕ್ಕಿಂತಲೂ ಜಾತಿ ರಾಜಕಾರಣದ ಸಮೀಕರಣವೇ ಹೆಚ್ಚು ಕೆಲಸ ಮಾಡಿದೆ. ಈ ಸಲ ದಲಿತ ಮತಗಳು ಸಾಮೂಹಿಕವಾಗಿ ಎಸ್‌ಪಿ ಸೇರಿದಂತೆ ಇಂಡಿಯಾ ಬ್ಲಾಕ್‌ನತ್ತ ತಿರುಗಿದೆ ಎನ್ನಲಾಗುತ್ತಿದೆ. ಹಾಗೆಯೇ ಮುಸ್ಲಿಂ ಮತಗಳೂ ಸಾಂಪ್ರದಾಯಿಕವಾಗಿ ಎಸ್‌ಪಿ ಹಾಗೂ ಬಿಎಸ್‌ಪಿಯ ಪಾಲಾದವು. ಇದು ಬಿಜೆಪಿಗೆ ನಷ್ಟ ಉಂಟುಮಾಡಿದೆ.

Continue Reading
Advertisement
Govt Employees Association
ಕರ್ನಾಟಕ2 mins ago

Govt Employees Association: ರಾಜ್ಯ ಸರ್ಕಾರಿ ನೌಕರರ ಸಂಘದ ಚುನಾವಣೆ ನಡೆಸಲು ಕಾರ್ಯಕಾರಿ ಸಮಿತಿ ತೀರ್ಮಾನ

pm narendra modi resignation
ಪ್ರಮುಖ ಸುದ್ದಿ9 mins ago

PM Narendra Modi: ಪ್ರಧಾನಿ ಹುದ್ದೆಗೆ ನರೇಂದ್ರ ಮೋದಿ ರಾಜೀನಾಮೆ

India vs Ireland
ಕ್ರೀಡೆ16 mins ago

India vs Ireland: ಇಂದು ನಡೆಯುವ ಭಾರತ-ಐರ್ಲೆಂಡ್​ ಪಂದ್ಯಕ್ಕೆ ಮಳೆ ಭೀತಿ ಇದೆಯೇ?

Uttarkashi Trekking Tragedy
ಪ್ರಮುಖ ಸುದ್ದಿ35 mins ago

Uttarkashi Trekking Tragedy: ಉತ್ತರಕಾಶಿಯಲ್ಲಿ ಪ್ರತಿಕೂಲ ಹವಾಮಾನ; ಚಾರಣಕ್ಕೆ ತೆರಳಿದ್ದ ಕರ್ನಾಟಕದ ನಾಲ್ವರ ಸಾವು

Election Results 2024
Lok Sabha Election 202445 mins ago

Election Results 2024: ಎನ್‌ಡಿಎಗೆ ಬೆಂಬಲ ನೀಡುವುದಾಗಿ ಘೋಷಿಸಿದ ಟಿಡಿಪಿ ಮುಖ್ಯಸ್ಥ ಚಂದ್ರಬಾಬು ನಾಯ್ಡು; ಬಿಜೆಪಿಗೆ ಬಿಗ್‌ ರಿಲೀಫ್‌

Election Results 2024
ಪ್ರಮುಖ ಸುದ್ದಿ1 hour ago

Election Results 2024 : ಫಲಿತಾಂಶ ಬದಲಾಯಿಸಿದ್ದು ಮುಸ್ಲಿಂ ಮತಗಳೇ? ಈ ಬಾರಿ 15 ಮುಸ್ಲಿಂ ಸಂಸದರ ಆಯ್ಕೆ

prajwal revanna case
ಪ್ರಮುಖ ಸುದ್ದಿ1 hour ago

‌Prajwal Revanna Case: ಪ್ರಜ್ವಲ್ ರೇವಣ್ಣ‌ ಮನೆಯಲ್ಲಿ ಪತ್ತೆಯಾಯ್ತು ಸಂಶಯಾಸ್ಪದ ಕಲೆ ಇರುವ ಬೆಡ್‌ಶೀಟ್!

Odisha Assembly election 2024
ದೇಶ1 hour ago

Odisha Assembly Result 2024: ಬಿಜೆಡಿಗೆ ಆಘಾತಕಾರಿ ಸೋಲು; ಒಡಿಶಾ ಸಿಎಂ ರಾಜೀನಾಮೆ

Election results 2024
Lok Sabha Election 20242 hours ago

Election Results 2024: ಮೋದಿ ಪಟ್ಟಾಭಿಷೇಕಕ್ಕೆ ಮೂಹೂರ್ತ ಫಿಕ್ಸ್‌: ಜೂ. 8ರಂದು ಪ್ರಧಾನಿಯಾಗಿ ಪ್ರಮಾಣ ವಚನ?

Lakshmi Hebbalkar
ಪ್ರಮುಖ ಸುದ್ದಿ2 hours ago

Lakshmi Hebbalkar : ಉಡುಪಿ ಜಿಲ್ಲಾ ಕಾಂಗ್ರೆಸ್​​ ಉಸ್ತುವಾರಿ ಲಕ್ಷ್ಮೀ ಹೆಬ್ಬಾಳ್ಕರ್​ಗೆ ‘ಗೋ ಬ್ಯಾಕ್​’ ಬಿಸಿ

Sharmitha Gowda in bikini
ಕಿರುತೆರೆ8 months ago

Geetha Serial Kannada: ನಿದ್ದೆ ಕದ್ದ ಚೋರಿ! ನಟಿ `ಭಾನುಮತಿ’ ಹಾಟ್‌ ಪೋಟೊಗಳಿಗೆ ಫ್ಯಾನ್ಸ್ ಫುಲ್ ಫಿದಾ

Kannada Serials
ಕಿರುತೆರೆ8 months ago

Kannada Serials TRP: 2ನೇ ಸ್ಥಾನದಲ್ಲಿ 2 ಧಾರಾವಾಹಿಗಳು; ಟಿಆರ್‌ಪಿ ರೇಸ್‌ನಲ್ಲಿಲ್ಲ ಭಾಗ್ಯಲಕ್ಷ್ಮೀ!

Bigg Boss- Saregamapa 20 average TRP
ಕಿರುತೆರೆ8 months ago

Kannada Serials TRP: ಏಳನೇ ಸ್ಥಾನಕ್ಕೆ ʻಅಮೃತಧಾರೆʼ ಕುಸಿತ; ಬಿಗ್‌ ಬಾಸ್‌-ಸರಿಗಮಪ ಟಿಆರ್‌ಪಿ ಎಷ್ಟು?

galipata neetu
ಕಿರುತೆರೆ6 months ago

Kanyadana Serial: ಕಿರುತೆರೆಗೆ ಮತ್ತೆ ಎಂಟ್ರಿ ಕೊಟ್ಟ ʻಗಾಳಿಪಟʼ ಖ್ಯಾತಿಯ ʻನೀತುʼ!

Kannada Serials
ಕಿರುತೆರೆ8 months ago

Kannada Serials TRP: ನಾಲ್ಕನೇ ಸ್ಥಾನಕ್ಕೆ ಕುಸಿತ ಕಂಡ ʻಸೀತಾ ರಾಮʼ; ಟಿಆರ್‌ಪಿ ರೇಸ್‌ಗೆ ʻಭಾಗ್ಯಲಕ್ಷ್ಮಿʼ ಬ್ಯಾಕ್‌!

Kannada Serials
ಕಿರುತೆರೆ8 months ago

Kannada Serials TRP: ಟಿಆರ್‌ಪಿಯಲ್ಲಿ ʻಭಾಗ್ಯಲಕ್ಷ್ಮೀʼ ಹವಾ; ʻಪುಟ್ಟಕ್ಕನ ಮಕ್ಕಳುʼ ಧಾರಾವಾಹಿಗೆ ಸಂಕಷ್ಟ!

Bigg Boss' dominates TRP; Sita Rama fell to the sixth position
ಕಿರುತೆರೆ7 months ago

Kannada Serials TRP: ಟಿಆರ್‌ಪಿಯಲ್ಲಿ ʻಬಿಗ್ ಬಾಸ್ʼದೇ ಮೇಲುಗೈ; 6ನೇ ಸ್ಥಾನಕ್ಕೆ ಕುಸಿದ ʻಸೀತಾ ರಾಮʼ

geetha serial Dhanush gowda engagement
ಕಿರುತೆರೆ6 months ago

Dhanush Gowda: ಗೀತಾ ಧಾರಾವಾಹಿ ನಟನ ನಿಶ್ಚಿತಾರ್ಥ; ಭವ್ಯಾಳ ಕಮೆಂಟ್‌ ಬಾಕ್ಸ್‌ ಆಫ್‌!

varun
ಕಿರುತೆರೆ7 months ago

Brindavana Serial: ʼಬೃಂದಾವನʼ ಧಾರಾವಾಹಿಯಲ್ಲಿ ದೊಡ್ಡ ಟ್ವಿಸ್ಟ್‌; ಪ್ರಮುಖ ಪಾತ್ರಧಾರಿಯೇ ಬದಲು

Kannada Serials
ಕಿರುತೆರೆ9 months ago

Kannada Serials TRP: ಟಿಆರ್‌ಪಿಯಲ್ಲಿ ಏರಿಕೆ ಕಂಡ ʻಅಮೃತಧಾರೆʼ; ʻಗಟ್ಟಿಮೇಳʼಕ್ಕೆ ನಾಲ್ಕನೇ ಸ್ಥಾನ!

Lok Sabha Election Result 2024 Live
ದೇಶ1 day ago

Lok Sabha Election Result 2024 Live: ಲೋಕಸಭೆ ಚುನಾವಣೆ ಫಲಿತಾಂಶದ ಲೈವ್‌ ಇಲ್ಲಿ ವೀಕ್ಷಿಸಿ

Karnataka Rain
ಮಳೆ2 days ago

Karnataka Rain : 133 ವರ್ಷದ ರೆಕಾರ್ಡ್ ಬ್ರೇಕ್ ಮಾಡಿದ ʻಬೆಂಗಳೂರು ಮಳೆʼ

Snake Rescue Snakes spotted in heavy rain
ಮಳೆ2 days ago

Snake Rescue: ಮಳೆ ನೀರಿನಲ್ಲಿ ಹರಿದು ಬಂದು ಬೈಕ್‌ನಲ್ಲಿ ಸೇರಿಕೊಂಡ ಹಾವು; ಮನೆಗಳಲ್ಲೂ ಪ್ರತ್ಯಕ್ಷ

Karnataka Rain
ಮಳೆ3 days ago

Karnataka Rain : ವೀಕೆಂಡ್‌ ಮೋಜಿಗೆ ವರುಣ ಅಡ್ಡಿ; ಭಾನುವಾರ ಸಂಜೆಗೆ ಮಳೆ ಕಾಟ

Liquor ban
ಬೆಂಗಳೂರು4 days ago

Liquor Ban : ಮುಂದಿನ ಏಳು ದಿನಗಳಲ್ಲಿ ನಾಲ್ಕೂವರೆ ದಿನ ಬಾರ್ ಕ್ಲೋಸ್; ಎಣ್ಣೆ ಸಿಗೋದು ಯಾವ ದಿನ?

Assault Case in Shivamogga
ಕ್ರೈಂ6 days ago

Assault Case : ಶಿವಮೊಗ್ಗದಲ್ಲಿ ಮತ್ತೆ ಬಾಲ ಬಿಚ್ಚಿದ ಪುಂಡರು; ಗಾಂಜಾ ನಶೆಯಲ್ಲಿ ವಾಹನಗಳು ಪೀಸ್‌ ಪೀಸ್‌

Karnataka weather Forecast
ಮಳೆ1 week ago

Karnataka Weather : ಚಿಕ್ಕಮಗಳೂರಲ್ಲಿ ಭಾರಿ ಮಳೆ; ಯಾದಗಿರಿಯಲ್ಲಿ ಕರೆಂಟ್‌ ಕಟ್‌, ಜನರೇಟರ್‌ನಿಂದ ಮೊಬೈಲ್‌ಗಳಿಗೆ ಚಾರ್ಜಿಂಗ್‌!

tumkur murder
ತುಮಕೂರು1 week ago

Tumkur Murder : ಮಗುವಿನ ಮುಂದೆಯೇ ಹೆಂಡತಿಯ ಕತ್ತು, ದೇಹವನ್ನು ಕತ್ತರಿಸಿ ಬಿಸಾಡಿದ ದುಷ್ಟ

Karnataka Weather Forecast
ಮಳೆ1 week ago

Karnataka Weather : ಕಡಲತೀರದಲ್ಲಿ ಅಲೆಗಳ ಅಬ್ಬರ, ಪ್ರವಾಸಿಗರಿಗೆ ಕಟ್ಟೆಚ್ಚರ; ನಾಳೆಯೂ ಗಾಳಿ ಸಹಿತ ಮಳೆ ಅಬ್ಬರ

Karnataka Rain
ಮಳೆ1 week ago

Karnataka Rain : ಯಾದಗಿರಿಯಲ್ಲಿ ಬಿರುಗಾಳಿ ಸಹಿತ ಮಳೆ; ಸಿಡಿಲು ಬಡಿದು ಎಮ್ಮೆಗಳು ಸಾವು

ಟ್ರೆಂಡಿಂಗ್‌