Viral Video : ಕೆಲಸ ಹೋದ ಬೇಜಾರಲ್ಲಿ ಯುವತಿ ಮಾಡಿದ ಕ್ರಿಯೇಟಿವ್​ ವಿಡಿಯೊಗೆ ಬಂತು ಸಿಕ್ಕಾಪಟ್ಟೆ ಆಫರ್​ಗಳು! - Vistara News

ಪ್ರಮುಖ ಸುದ್ದಿ

Viral Video : ಕೆಲಸ ಹೋದ ಬೇಜಾರಲ್ಲಿ ಯುವತಿ ಮಾಡಿದ ಕ್ರಿಯೇಟಿವ್​ ವಿಡಿಯೊಗೆ ಬಂತು ಸಿಕ್ಕಾಪಟ್ಟೆ ಆಫರ್​ಗಳು!

Job layoff : ಯುವತಿ ವಿಡಿಯೊ ನೋಡಿದ ಆಕೆಯನ್ನು ಕೆಲಸದಿಂದ ತೆಗೆದ ಕಂಪನಿಯೇ ಮತ್ತೆ ಕೆಲಸಕ್ಕೆ ಕರೆದಿದೆ!

VISTARANEWS.COM


on

Job layoff
ಮಹತ್ವದ, ಕುತೂಹಲಕರ ಸುದ್ದಿಗಾಗಿ ಫಾಲೊ ಮಾಡಿ
Koo

ಬೆಂಗಳೂರು : ಮಾರ್ಕೆಂಟಿಂಗ್​ ಕ್ಷೇತ್ರದಲ್ಲಿ ಸವಾಲು ಜಾಸ್ತಿ. ಕೆಲಸವೂ ಹೆಚ್ಚು ಅತಂತ್ರ. ಅಂತೆಯೇ ಯುವತಿಯೊಬ್ಬಳು ಕಂಪನಿಯೊಂದರಲ್ಲಿ ಕೆಲಸ ಕಳೆದುಕೊಂಡಿದ್ದಳು. ಆ ಬೇಜಾರಿನಲ್ಲಿ ಆಕೆ ಮಾಡಿದ ವಿಡಿಯೊಗೆ ಸಾವಿರಾರು ಜಾಬ್​ ಆಫರ್​​ಗಳು ಬಂದ ಪ್ರಸಂಗವೊಂದು ನಡೆದಿದೆ. ಇದು ನಡೆದಿರುವುದು ಸ್ಪೇನ್​ನಲ್ಲಿ. ಆಕೆಯ ಹೆಸರು ಮರ್ತಾ ಪೋರ್ಟೊ . ಲಿಂಕ್ಡ್ಇನ್​ನಲ್ಲಿ ಆಕೆ ಪೋಸ್ಟ್​ ಮಾಡಿದ 1 ನಿಮಿಷ, 42 ಸೆಕೆಂಡುಗಳ ಸುದೀರ್ಘ ವೀಡಿಯೊಗೆ (Viral Video) ಸಿಕ್ಕಾಪಟ್ಟೆ ಆಫರ್​ಗಳು ಬಂದಿವೆ.

ಇಲ್ಲಿದೆ ಮಾರ್ತಾ ಮಾಡಿದ ವಿಡಿಯೊ

ಕೆಲಸವನ್ನು ಕಳೆದುಕೊಂಡ ತನ್ನನ್ನು ಪರಿಚಯಿಸಲು ರೆಸ್ಯೂಮ್ ಅನ್ನು ಮಾಡುವ ಬದಲ, ಮ್ಯಾಡ್ರಿಡ್ ಮೂಲದ ಮಾರ್ಕೆಟಿಂಗ್ ಮ್ಯಾನೇಜರ್ ಮಾರ್ತಾ ಪೋರ್ಟೊ ತನ್ನ ಕಥೆಯನ್ನು ವಿಭಿನ್ನ ರೀತಿಯಲ್ಲಿ ಹೇಳಲು ಪ್ರಯತ್ನಿಸಿದ್ದರು. ಸ್ವತಃ ಮಾರ್ಕೆಟಿಂಗ್ ಮಾಡುವ ಮೂಲಕ ತನ್ನ ಕೌಶಲ್ಯಗಳನ್ನು ಪ್ರದರ್ಶಿಸಿದ್ದರು. ಹೀಗಾಗಿ ಅವರು ಹಲವಾರು ಆಫರ್​ಗಳನ್ನು ಪಡೆದುಕೊಂಡಿದ್ದಾರೆ.

ಪೋರ್ಟೋ ವಿಡಿಯೋ ವೈರಲ್ ಆಗಿದ್ದು, ಲಿಂಕ್ಡ್ಇನ್ನಲ್ಲಿ 60,000 ಕ್ಕೂ ಹೆಚ್ಚು ಲೈಕ್​​ಗಳು ಬಂದಿವೆ ಮತ್ತು ನೂರಾರು ಉದ್ಯೋಗದಾತರ ಗಮನ ಸೆಳೆದಿದೆ. ಪೋರ್ಟೊ ಅವರು ಈಗ ಕಂಪನಿಗಳಿಂದ ಇಂಟರ್​ವ್ಯೂ ಕರೆಗಳಿಂದ ಬ್ಯುಸಿಯಾಗಿದ್ದಾರೆ. ಲಿಂಕ್ಡ್​ಇನ್​ 5,000 ಕ್ಕೂ ಹೆಚ್ಚು ಸಂಪರ್ಕ ಸ್ವೀಕರಿಸಿದ್ದಾರೆ ಎಂದು ಹೇಳಿಕೊಂಡಿದ್ದಾರೆ.

ಹಳೆ ಕಂಪನಿಯಿಂದಲೇ ಕರೆ

ನನ್ನ ನೆಟ್​ವರ್ಕ್​​ನಿಂದ 100 ಅಥವಾ ಗರಿಷ್ಠ 200 ಲೈಕ್​ಗಳು ಬರಬಹುದು ಎಂದು ನಾನು ಭಾವಿಸಿದೆ ಎಂದು ಅವರು ಸಂದರ್ಶನವೊಂದರಲ್ಲಿ ಹೇಳಿಕೊಂಡಿದ್ದಾರೆ. ಆದರೆ ಆಗಿದ್ದೇ ಬೇರೆ. ನನ್ನನ್ನೇ ಬೇಡ ಎಂದು ಹೇಳಿ ಮನೆಗೆ ಕಳುಹಿಸಿದ್ದ ಹಳೆ ಕಂಪನಿಯೂ ಕೆಲಸಕ್ಕೆ ಕರೆದಿದೆ ಎಂದು ಅವರು ಹೇಳಿಕೊಂಡಿದ್ದಾರೆ.

ಇದನ್ನೂ ಓದಿ : Inhuman Behaviour : ಬಾಯ್‌ ಫ್ರೆಂಡ್‌ ಜತೆ ಸೇರಿ ಹೆತ್ತ ಮಗುವಿನ ಮರ್ಮಾಂಗ ಕಚ್ಚಿದಳು ರಾಕ್ಷಸಿ!

ಅಕ್ಟೋಬರ್​​ನಲ್ಲಿ ಫಿನ್ಟೆಕ್ ಕಂಪನಿಯಲ್ಲಿ ಕೆಲಸ ಕಳೆದುಕೊಂಡ ಪೋರ್ಟೊ ಹಲವಾರು ಕೆಸಲಕ್ಕಾಗಿ ಅರ್ಜಿಗಳನ್ನು ಸಲ್ಲಿಸಿದ್ದರು. ಆದರೆ ಅವರಿಗೆ ಸೂಕ್ತ ಪ್ರತಿಕ್ರಿಯೆ ಸಿಕ್ಕಿರಲಿಲ್ಲ. ಹೀಗಾಗಿ ಅವರು ವಿಡಿಯೊ ಮಾಡಲು ಮುಂದಾದರು. ಅದರ ಪರಿಣಾಮವಾಗಿ ಹಲವಾರು ಆಯ್ಕೆಗಳು ಸಿಕ್ಕಿವೆ.

ಪಿತ್ತಕೋಶದ ಶಸ್ತ್ರಚಿಕಿತ್ಸೆ ಬದಲು ಸಂತಾನಶಕ್ತಿ ಹರಣ ಶಸ್ತ್ರಚಿಕಿತ್ಸೆ ನಡೆಸಿದರು !

ಬೆಂಗಳೂರು: ಕೆಲವೊಮ್ಮೆ ವೈದ್ಯರು ಮಾಡುವ ಸಣ್ಣದೊಂದು ಎಡವಟ್ಟು, ನಿರ್ಲಕ್ಷ್ಯ ರೋಗಿಯ ಜೀವನವನ್ನೇ ಬದಲಾಯಿಸಿ ಬಿಡುತ್ತದೆ. ಕೆಲವೊಮ್ಮೆ ಪ್ರಾಣವನ್ನೇ ಕಸಿದು ಬಿಡುತ್ತದೆ. ಕೆಲವು ದಿನಗಳ ಹಿಂದೆ ಹೈದರಾಬಾದ್‌ನಲ್ಲಿ ದಂತ ವೈದ್ಯರ ನಿರ್ಲಕ್ಷ್ಯದಿಂದ ಯುವಕನೊಬ್ಬ ಮೃತಪಟ್ಟಿದ್ದ. ಇದೀಗ ದೂರದ ಅರ್ಜೆಂಟೀನಾದಲ್ಲಿ ವೈದ್ಯರ ಎಡವಟ್ಟಿನಿಂದ ವ್ಯಕ್ತಿಯೊಬ್ಬರು ಸಂಕಷ್ಟಕ್ಕೆ ಸಿಲುಕಿದ ಘಟನೆ ವರದಿಯಾಗಿದೆ. ವೈದ್ಯರು ಪಿತ್ತಕೋಶದ ಶಸ್ತ್ರಚಿಕಿತ್ಸೆಗಾಗಿ ದಾಖಲಾದ ವ್ಯಕ್ತಿಯ ಸಂತಾನಶಕ್ತಿ ಹರಣ ಚಿಕಿತ್ಸೆ ಮಾಡಿದ್ದಾರೆ (Viral News).

ಘಟನೆಯ ವಿವರ
41 ವರ್ಷದ ಜಾರ್ಜ್ ಬೇಸೆಟೊ ತೊಂದರೆಗೆ ಸಿಲುಕಿದವರು. ಅವರು ಪಿತ್ತಕೋಶದ ಶಸ್ತ್ರಚಿಕಿತ್ಸೆಗಾಗಿ ಅರ್ಜೆಂಟೀನಾದ ಕಾರ್ಡೋಬಾದಲ್ಲಿರುವ ಫ್ಲೋರೆನ್ಸಿಯೊ ಡಿಯಾಜ್ ಆಸ್ಪತ್ರೆಯಲ್ಲಿ ದಾಖಲಾಗಿದ್ದರು. ಫೆಬ್ರವರಿ 28ರಂದು ಶಸ್ತ್ರ ಚಿಕಿತ್ಸೆಯ ದಿನ ನಿಗದಿಯಾಗಿತ್ತು. ಆದರೆ ಕಾರಣಾಂತರಗಳಿಂದ ಫೆಬ್ರವರಿ 29ಕ್ಕೆ ಮುಂದೂಡಲಾಗಿತ್ತು. ʼʼಶಸ್ತ್ರಚಿಕಿತ್ಸೆಯ ದಿನದಂದು ಆಸ್ಪತ್ರೆಯ ಸಿಬ್ಬಂದಿ ಏನನ್ನೂ ಕೇಳದೆ ಅಥವಾ ಹೆಲ್ತ್​​​​ ಚಾರ್ಟ್ ಅನ್ನು ಕೂಡ ಪರಿಶೀಲಿಸದೆ ಆಪರೇಷನ್​​​ ಮಾಡಲು ಕರೆದುಕೊಂಡು ಹೋಗಿದ್ದರುʼʼ ಎಂದು ಜಾರ್ಜ್ ಬೇಸೆಟೊ ತಿಳಿಸಿದ್ದಾರೆ.

ಶಸ್ತ್ರಚಿಕಿತ್ಸೆ ಪೂರ್ಣಗೊಂಡ ಬಳಿಕ ಎಚ್ಚರಗೊಂಡ ಜಾರ್ಜ್ ಬೇಸೆಟೊ ಬಳಿ ಸಂತಾನಶಕ್ತಿ ಹರಣ ಚಿಕಿತ್ಸೆಯ ಬಗ್ಗೆ ವೈದ್ಯರು ತಿಳಿಸಿದ್ದರು. ಇದರಿಂದ ಜಾರ್ಜ್ ಬೇಸೆಟೊ ಶಾಕ್‌ಗೆ ಒಳಗಾಗಿದ್ದರು. ನಂತರ ಪಿತ್ತಕೋಶದ ಶಸ್ತ್ರಚಿಕಿತ್ಸೆ ನಡೆಸಲಾಯಿತು.

ಸದ್ಯ ವೈದ್ಯರ ಈ ಎಡವಟ್ಟಿನ ಬಗ್ಗೆ ವ್ಯಾಪಕ ಆಕ್ರೋಶ ವ್ಯಕ್ತವಾಗಿದೆ. ಈ ಕುರಿತು ಜಾರ್ಜ್ ಅವರ ವಕೀಲ ಡಿಯಾಗೋ ಲ್ಯಾರೆ ಮಾತನಾಡಿ, ”ವೈದ್ಯರ ಈ ಮಟ್ಟದ ನಿರ್ಲಕ್ಷ್ಯವನ್ನು ಕ್ಷಮಿಸಲು ಸಾಧ್ಯವಿಲ್ಲ. ಜಾರ್ಜ್ ಇಬ್ಬರು ಗಂಡು ಮಕ್ಕಳ ತಂದೆಯಾಗಿದ್ದರೂ, ಕೂಡ ಅವರು ಹೊಸ ಸಂಬಂಧದಲ್ಲಿದ್ದಾರೆ ಮತ್ತು ಭವಿಷ್ಯದಲ್ಲಿ ಮತ್ತೊಂದು ಮಗು ಹೊಂದಲು ಯೋಜನೆಯನ್ನು ಹಾಕಿಕೊಂಡಿದ್ದರು” ಎಂದು ಹೇಳಿದ್ದಾರೆ. ಜಾರ್ಜ್ ಕಾನೂನು ಸಮರಕ್ಕೆ ಮುಂದಾಗಿದ್ದಾರೆ.

ಕ್ಷಣ ಕ್ಷಣದ ಮಾಹಿತಿಗಾಗಿ Vistara News FaceBook ಪೇಜ್ ಫಾಲೋ ಮಾಡಿ
ಮಹತ್ವದ ಮಾಹಿತಿಗಾಗಿ ವಿಸ್ತಾರ ನ್ಯೂಸ್ ಆ್ಯಪ್ ಉಚಿತವಾಗಿ ಡೌನ್ ಲೋಡ್ ಮಾಡಿಕೊಳ್ಳಿ: Andriod App | IOS App

ಪ್ರಮುಖ ಸುದ್ದಿ

CET/NEET: ಮೊದಲ ಬಾರಿಗೆ ಆನ್ ಲೈನ್ ಪಾವತಿ ಜಾರಿ, ಒಳ್ಳೆಯ ಪ್ರತಿಕ್ರಿಯೆ

CET/NEET: ವೈದ್ಯಕೀಯ, ಎಂಜಿನಿಯರಿಂಗ್ ಸೇರಿದಂತೆ ಇತರ ವೃತ್ತಿಪರ ಕೋರ್ಸ್‌ಗಳ (CET/NEET) ಪ್ರವೇಶ ಪ್ರಕ್ರಿಯೆ ಆರಂಭವಾದ ಮೊದಲ ದಿನವೇ (ಶನಿವಾರ) ದಾಖಲೆಯ 16 ಸಾವಿರಕ್ಕೂ ಹೆಚ್ಚು ಮಂದಿ ತಮ್ಮ ಇಚ್ಛೆಯ ಛಾಯ್ಸ್ ದಾಖಲು ಮಾಡಿದ್ದಾರೆ.

VISTARANEWS.COM


on

UPSC
Koo

ಬೆಂಗಳೂರು: ವೈದ್ಯಕೀಯ, ಎಂಜಿನಿಯರಿಂಗ್ ಸೇರಿದಂತೆ ಇತರ ವೃತ್ತಿಪರ ಕೋರ್ಸ್‌ಗಳ (CET/NEET) ಪ್ರವೇಶ ಪ್ರಕ್ರಿಯೆ ಆರಂಭವಾದ ಮೊದಲ ದಿನವೇ (ಶನಿವಾರ) ದಾಖಲೆಯ 16 ಸಾವಿರಕ್ಕೂ ಹೆಚ್ಚು ಮಂದಿ ತಮ್ಮ ಇಚ್ಛೆಯ ಛಾಯ್ಸ್ ದಾಖಲು ಮಾಡಿದ್ದಾರೆ. 3000 ಕ್ಕೂ ಹೆಚ್ಚು ಮಂದಿ ಶುಲ್ಕ ಪಾವತಿ ಮಾಡಿ, ಪ್ರವೇಶ ಪತ್ರ ಡೌನ್‌ಲೋಡ್ ಮಾಡಿಕೊಂಡಿದ್ದಾರೆ.

ಇದೇ ಮೊದಲ ಬಾರಿಗೆ ಇಂಟರ್ ನೆಟ್ ಬ್ಯಾಂಕಿಂಗ್, ಡೆಬಿಟ್/ಕೆಡಿಟ್ ಕಾರ್ಡ್ ಮೂಲಕ ಶುಲ್ಕ ಪಾವತಿಸುವುದಕ್ಕೂ ಅವಕಾಶ ಕಲ್ಪಿಸಿದ್ದರಿಂದ ಇಡೀ ಪ್ರಕ್ರಿಯೆ ಸರಳವಾಯಿತು. ಇದರಿಂದ ಪೋಷಕರಿಗೂ ಸಂತಸವಾಗಿದೆ ಎಂದು ಕರ್ನಾಟಕ ಪರೀಕ್ಷಾ ಪ್ರಾಧಿಕಾರದ ಕಾರ್ಯನಿರ್ವಾಹಕ ನಿರ್ದೇಶಕ ಎಚ್.ಪ್ರಸನ್ನ ತಿಳಿಸಿದ್ದಾರೆ. ಚಲನ್‌ ಡೌನ್‌ ಲೋಡ್ ಮಾಡಿಕೊಂಡು ಬ್ಯಾಂಕಿಗೆ ಹೋಗಿ ಶುಲ್ಕ ಪಾವತಿಸುವ ವ್ಯವಸ್ಥೆ ಕೂಡ‌ ಇದ್ದು, ಅದರ ಮೂಲಕವೂ‌ 2000 ಮಂದಿ (ರಾತ್ರಿ 8ಕ್ಕೆ) ಶುಲ್ಕ ಪಾವತಿಸಿದ್ದಾರೆ. ಆನ್ ಲೈನ್ ಮೂಲಕ ಒಂದು ಸಾವಿರ ಮಂದಿ ಪಾವತಿಸಿದ್ದಾರೆ ಎಂದು ವಿವರಿಸಿದ್ದಾರೆ.

ವೈದ್ಯಕೀಯ ಕೋರ್ಸ್ ಪ್ರವೇಶ ಪಡೆದ ಕೆಲವರು‌ ತಮ್ಮ ಗರಿಷ್ಠ ಮೊತ್ತದ ಶುಲ್ಕ‌ವನ್ನೂ (6.09 ಲಕ್ಷ) ಇಂಟರ್ನೆಟ್ ಬ್ಯಾಂಕಿಂಗ್ ಮೂಲಕ ಪಾವತಿ‌ ಮಾಡಿದ್ದಾರೆ. ಅಭ್ಯರ್ಥಿಗಳು ಅಥವಾ ಅವರ ಪೋಷಕರು ತಮ್ಮ ಬ್ಯಾಂಕಿನಿಂದ ಪಾವತಿ‌ ಮಾಡುವ ಮಿತಿಯನ್ನು ಹೆಚ್ವಿಸಿಕೊಳ್ಳಲು ಅವಕಾಶ ಇದ್ದು, ಅದನ್ನು ಸದುಪಯೋಗ ಪಡಿಸಿಕೊಳ್ಳಬೇಕು ಎಂದು ಅವರು‌ ಹೇಳಿದರು. ಎಚ್ ಡಿಎಫ್ ಸಿ ಬ್ಯಾಂಕ್ ತನ್ನ ಗ್ರಾಹರಿಗೆ ಒಮ್ಮೆಗೇ ಗರಿಷ್ಠ 50 ಲಕ್ಷ ರೂಪಾಯಿ ವರೆಗೆ ವರ್ಗಾಯಿಸಲು ಅವಕಾಶ ನೀಡಿದೆ. ಇದೇ ರೀತಿ ಇತರ ಬ್ಯಾಂಕ್ ಗಳೂ ಈ ನಿಟ್ಟಿನಲ್ಲಿ ಪ್ರಯತ್ನ‌ ನಡೆಸುತ್ತಿದ್ದು ಇದರಿಂದ ಎನ್ಆರ್ ಐ ಮತ್ತು ಮ್ಯಾನೇಜ್ಮೆಂಟ್ ಸೀಟುಗಳ ಶುಲ್ಕವನ್ನು ಒಮ್ನೆಗೆ ಪಾವತಿಸಲು ಅನುಕೂಲವಾಗಲಿದೆ ಎಂದಿದ್ದಾರೆ. ಹೊಸ ವ್ಯವಸ್ಥೆಯಿಂದಾಗಿ ಬ್ಯಾಂಕ್ ರಜೆ ಇತ್ಯಾದಿ ಕಾರಣಕ್ಕೆ ಶುಲ್ಕ ಪಾವತಿ ಮಾಡಲು ಸಾಧ್ಯವಾಗಲಿಲ್ಲ ಎನ್ನುವ ದೂರುಗಳು ಕಡಿಮೆ ಆಗಬಹುದು. ನಾಳೆ ಭಾನುವಾರ ಇದ್ದರೂ ಶುಲ್ಕ ಪಾವತಿಗೆ ಯಾವ ಸಮಸ್ಯೆಯೂ ಇರುವುದಿಲ್ಲ ಎಂದು ಅವರು ಹೇಳಿದ್ದಾರೆ. ಯುಪಿಐ ಪಾವತಿ ವ್ಯವಸ್ಥೆ ಮೂಲಕವೂ ಶುಲ್ಕ ಪಾವತಿ ಮಾಡಬಹುದಾಗಿದೆ. ಒಟ್ಟಾರೆ ಪಾವತಿ ವ್ಯವಸ್ಥೆಯನ್ನು ಜನಸ್ನೇಹಿ‌ ಮಾಡಿರುವ ಕಾರಣಕ್ಕೆ ತಾಂತ್ರಿಕ ಸಮಸ್ಯೆಗಳು ಕಡಿಮೆ ಆಗುವ ವಿಶ್ವಾಸವಿದೆ‌ ಎಂದರು.

ಸರ್ವರ್ ಸಮಸ್ಯೆ

ಚಾಯ್ಸ್ ಆಯ್ಕೆ ನಂತರ ಶುಲ್ಕ ಪಾವತಿ ಮಾಡಲು ಹೆಚ್ಚಿನ ಸಂಖ್ಯೆಯ ವಿದ್ಯಾರ್ಥಿಗಳು ಒಮ್ಮೆಗೇ ಪ್ರಯತ್ನ ನಡೆಸಿದ್ದರಿಂದ ಕೆಲವೊಮ್ಮೆ ಸರ್ವರ್ ನಿಧಾನ/ ಇನ್ನು ಕೆಲವೊಮ್ಮೆ ಸ್ಥಗಿತಗೊಂಡ ಪ್ರಸಂಗ ಕೂಡ ನಡೆಯಿತು. ತಾಂತ್ರಿಕ ಸಿಬ್ಬಂದಿ ಸರಿ ಮಾಡಿ ನಂತರ ಸಹಜ ಸ್ಥಿತಿಗೆ ತಂದರು.

Continue Reading

ಸಿನಿಮಾ

Sonal Monteiro: ಚರ್ಚ್ ವೆಡ್ಡಿಂಗ್‌ಗೂ ಮುನ್ನ ಸೋನಲ್ ಮನೆಯಲ್ಲಿ Roce Celebration

Sonal Monteiro: ಕನ್ನಡದ ಖ್ಯಾತ ನಿರ್ದೇಶಕ ತರುಣ್‌ ಸುಧೀರ್‌ ಹಾಗೂ ಸೋನಲ್‌ ಮೊಂಥೆರೋ ಅವರು ಕ್ರಿಶ್ಚಿಯನ್‌ ಸಂಪ್ರದಾಯದಂತೆ ಮದುವೆಯಾಗಲಿದ್ದು, ಸೋನಲ್ ಮನೆಯಲ್ಲಿ Roce Celebration ಆರಂಭಗೊಂಡಿದೆ. ಇದರ ಕಂಪ್ಲೀಟ್‌ ಡಿಟೆಲ್ಸ್‌ ಇಲ್ಲಿದೆ.

VISTARANEWS.COM


on

Sonal Monteiro
Koo

ಕನ್ನಡದ ಖ್ಯಾತ ನಿರ್ದೇಶಕ ತರುಣ್‌ ಸುಧೀರ್‌ (Tharun Sudhir) ಹಾಗೂ ಸೋನಲ್‌ ಮೊಂಥೆರೋ (Sonal Monteiro) ದಾಂಪತ್ಯ ಜೀವನಕ್ಕೆ ಕಾಲಿಟ್ಟಿದ್ದಾರೆ. ಈ ಜೋಡಿ ಬೆಂಗಳೂರಿನನ ಮೈಸೂರು ರೋಡಿನಲ್ಲಿರುವ ಪೂರ್ಣಿಮಾ ಪ್ಯಾಲೇಸ್‌ನಲ್ಲಿ ಎಲ್ಲರ ಸಮ್ಮುಖದಲ್ಲಿ ಅದ್ಧೂರಿಯಾಗಿ ಮದುವೆಯಾಗಿದ್ದಾರೆ.

tharun sudhir and sonal monteiro

ಈಗ ಇನ್ನೊಮ್ಮೆ ಸೆಪ್ಟೆಂಬರ್ 1ರಂದು ಮಂಗಳೂರಿನಲ್ಲಿ ಕ್ರಿಶ್ಚಿಯನ್‌ ಸಂಪ್ರದಾಯದಂತೆ ಮದುವೆಯಾಗಲು ಹೊರಟಿದ್ದಾರೆ. ಈಗಾಗಲೆ ಮದುವೆ ಸಮಾರಂಭ ಆರಂಭವಾಗಿದ್ದು, ಫೋಟೊಗಳು ಜಾಲತಾಣದಲ್ಲಿ ಹರಿದಾಡುತ್ತಿವೆ.

ಈಗಾಗಲೆ ಹತ್ತಿರದವರಿಗೆ ಆಮಂತ್ರಣ ನೀಡಿರುವ ಸೋನಲ್-ತರುಣ್, ಕುಟುಂಬಸ್ಥರು ಮತ್ತು ಆತ್ಮೀಯರ ಸಮ್ಮುಖದಲ್ಲಿ ಈ ಮದುವೆ ನಡೆಯಲಿದೆ. ಈ ಹಿಂದೆ ಚಿರಂಜೀವಿ ಸರ್ಜಾ-ಮೇಘನಾ ಸರ್ಜಾ ಅವರು ಹಿಂದು-ಕ್ರಿಶ್ಚಿಯನ್ ಧರ್ಮದ ಪ್ರಕಾರ ಮದುವೆಯಾಗಿದ್ದರು.

ಈಗ ಸೋನಲ್, ತರುಣ್ ಸಹ ಸಜ್ಜಾಗಿದ್ದಾರೆ. ಕ್ರಿಶ್ಚಿಯನ್ ಧರ್ಮದಲ್ಲಿ ಮದುವೆ ಹೆಣ್ಣು ಗುರುಗಳು ಅಥವಾ ಗುರುಗಳ ಪ್ರತಿನಿಧಿಯ ಮುಂದೆ ಎಲ್ಲರೆದುರಿಗೆ ತನ್ನ ಒಪ್ಪಿಗೆಯನ್ನು ವ್ಯಕ್ತಪಡಿಸಬೇಕಾಗುತ್ತದೆ.

ಮಂಗಳೂರಿನಲ್ಲಿ ವಿವಾಹ ಸಂಭ್ರಮ ಆರಂಭವಾಗಿದ್ದು ಮದುವೆ ಪ್ರಯುಕ್ತ ಸುಂದರವಾಗಿ ಡೆಕೋರೇಶನ್ ಮಾಡಲಾಗಿದೆ. ಸೋನಲ್ ಅವರ ಕುಟುಂಬಸ್ಥರು ಹೆಚ್ಚಾಗಿ ಭಾಗಿಯಾಗಿದ್ದು, ವಿವಾಹ ಪೂರ್ವದ ಶಾಸ್ತ್ರಕ್ಕೆ ಸೋನಲ್ ಅವರು ಹಳದಿ ಬಣ್ಣದ ಡ್ರೆಸ್ ಧರಿಸಿದ್ದರು. ಈಗಾಲೆ ಹಿಂದು ಸಂಪ್ರದಾಯದಲ್ಲಿ ಮದುವೆಯಾದ ಸೋನಲ್‌, ಮತ್ತೊಮ್ಮೆ ಮದುವೆಯಾಗುತ್ತಿರುವ ಖುಷಿಯಲ್ಲಿ ಇದ್ದಾರೆ.

ಇದನ್ನೂ ಓದಿ: Namratha Gowda: ಕಪ್ಪು ಸೀರೆಯುಟ್ಟು ನೋಡುಗರ ನಿದ್ದೆಗೆಡಿಸಿದ ಕಿರುತೆರೆ ನಟಿ ನಮ್ರತಾ ಗೌಡ

Continue Reading

ಸ್ಯಾಂಡಲ್ ವುಡ್

Pavitra Gowda : ರೇಣುಕಾ ಸ್ವಾಮಿ ಕೊಲೆ ಕೇಸ್‌; ಪವಿತ್ರಾಗೌಡ ಸಲ್ಲಿಸಿದ ಜಾಮೀನು ಅರ್ಜಿ ವಜಾ

Renuka swamy Murder case : ರೇಣುಕಾ ಸ್ವಾಮಿ ಕೊಲೆ ಕೇಸ್‌ ಎ1 ಆರೋಪಿ ಆಗಿರುವ ಪವಿತ್ರಾಗೌಡ (Pavitra Gowda) ಸಲ್ಲಿಸಿದ ಜಾಮೀನು ಅರ್ಜಿ ವಜಾಗೊಂಡಿದೆ. ಈ ಮೂಲಕ ಪವಿತ್ರಾಗೆ ಜೈಲುವಾಸ ಮುಂದುವರಿದಿದೆ.

VISTARANEWS.COM


on

By

Renuka Swamy murder case Pavithra Gowdas bail plea rejected
Koo

ಬೆಂಗಳೂರು: ಚಿತ್ರದುರ್ಗದ ರೇಣುಕಾ ಸ್ವಾಮಿ ಕೊಲೆ ಪ್ರಕರಣದಲ್ಲಿ ಬಂಧಿಯಾಗಿರುವ ನಟಿ ಪವಿತ್ರಾಗೌಡ (Pavitra Gowda) ಪರ ಸಲ್ಲಿಸಿದ್ದ ಜಾಮೀನು ಅರ್ಜಿ ವಜಾಗೊಂಡಿದೆ. ಅರ್ಜಿ ವಜಾಗೊಳಿಸಿ ಸಿಸಿಎಚ್‌ (CCH)57ನೇ ನ್ಯಾಯಾಲಯದ ನ್ಯಾಯಾಧೀಶರಾದ ಜೈ ಶಂಕರ್‌ ಆದೇಶ ಹೊರಡಿಸಿದ್ದಾರೆ. ಎ1 ಆರೋಪಿ‌ ಪವಿತ್ರಾಗೌಡ ಪರ ಅನುಕುಮಾರ್ ಸಲ್ಲಿಸಿದ ಜಾಮೀನು ಅರ್ಜಿ ವಜಾಗೊಂಡಿದೆ.

ದರ್ಶನ್- ಪವಿತ್ರಾ ದೂರದೂರವಾದರೂ ಒಂದಾಯಿತು ಇವರಿಬ್ಬರ ಮನೆಯ ಶ್ವಾನಗಳು

ಬೆಂಗಳೂರು: ಪರಪ್ಪನ ಅಗ್ರಹಾರ ಜೈಲಿನಿಂದ (Parappana Agrahara Jail) ಬಳ್ಳಾರಿ ಜೈಲಿಗೆ (Bellary Jail) ನಟ ದರ್ಶನ್ (Actor Darshan) ಸ್ಥಳಾಂತರಗೊಂಡಿದ್ದರೂ ಪವಿತ್ರಾ ಗೌಡ (Pavitra Gowda) ಬೆಂಗಳೂರಿನ ಪರಪ್ಪನ ಅಗ್ರಹಾರ ಜೈಲಿನಲ್ಲೇ ಇದ್ದಾರೆ. ಹೀಗಾಗಿ ದರ್ಶನ್ ಮತ್ತು ಪವಿತ್ರಾ ದೂರದೂರವಾಗಿದ್ದಾರೆ. ಆದರೆ ಇವರಿಬ್ಬರ ಶ್ವಾನಗಳು ಮಾತ್ರ ಇದೀಗ ಒಂದಾಗಿವೆ.

ದರ್ಶನ್ ಮತ್ತು ಪವಿತ್ರ ಗೌಡ ಜೈಲು ಸೇರುತ್ತಿದ್ದ ಹಾಗೆ ಇವರ ಶ್ವಾನಗಳು ಒಂದಾಗಿದ್ದವು. ಪವಿತ್ರಗೌಡ ಮನೆಯಲ್ಲಿದ್ದ ಶ್ವಾನಗಳನ್ನು ದರ್ಶನ್ ಮನೆಗೆ ಸ್ಥಳಾಂತರಿಸಲಾಗಿತ್ತು. ಹೀಗಾಗಿ ಈಗ ದರ್ಶನ್ ಮತ್ತು ಪವಿತ್ರಾ ಗೌಡ ಮನೆಯ ಶ್ವಾನಗಳು ಸ್ನೇಹಿತರಾಗಿದೆ.


ಪವಿತ್ರಾ ಗೌಡ ಮನೆಯಲ್ಲಿದ್ದ ವೈಟ್ ಫ್ರೆಂಚ್ ಬುಲ್ ಡಾಗ್ ಮತ್ತು ಬೆಲ್ಜಿಯಂ ಮಲಿನಾಯ್ಸ್ ತಳಿಯ ಶ್ವಾನಗಳು ಮನೆಯೊಡತಿ ಇಲ್ಲದೆ ಸೊರಗಿದ್ದವು. ಅವುಗಳನ್ನು ಪೀಪಲ್ಸ್ ಫಾರ್ ಅನಿಮಲ್ಸ್ ಟೀಂ ರಕ್ಷಣೆ ಮಾಡಿತ್ತು. ಬಳಿಕ ಅಧಿಕಾರಿಗಳು ಅವುಗಳನ್ನು ದರ್ಶನ್ ಮನೆಗೆ ಬಿಟ್ಟಿದ್ದಾರೆ.

ಶ್ವಾನ ಪ್ರೇಮಿಯಾಗಿದ್ದ ದರ್ಶನ್ ಸ್ನೇಹಿತೆ ಪವಿತ್ರಾಗೌಡ ಮನೆಯಲ್ಲಿ ವಿವಿಧ ತಳಿಯ 3 ಶ್ವಾನಗಳಿದ್ದವು. ಅವುಗಳಲ್ಲಿ ಒಂದನ್ನು ಕುಟುಂಬಸ್ಥರು ತೆಗೆದುಕೊಂಡು ಹೋಗಿದ್ದಾರೆ. ಒಲಿದ ಎರಡು ಶ್ವಾನಗಳನ್ನು ಪವನ್ ನೋಡಿಕೊಳ್ಳುತ್ತಿದ್ದ. ಆದರೆ ರೇಣುಕಾಸ್ವಾಮಿ ಕೊಲೆ ಕೇಸ್‌ನಲ್ಲಿ ಪವಿತ್ರಾ ಮತ್ತು ಪವನ್ ಜೈಲು ಸೇರಿದ್ದಾರೆ. ಬಳಿಕ ಶ್ವಾನಗಳನ್ನು ನೋಡಿಕೊಳ್ಳುವವರಿಲ್ಲದೆ ಅವುಗಳು ಸೊರಗಿದ್ದವು.

Actor Darshan
Actor Darshan


ದರ್ಶನ್ ಮನೆಗೆ ಎಂಟ್ರಿ

ಪವಿತ್ರಾ ಮತ್ತು ಪವನ್ ಜೈಲು ಸೇರಿದ್ದರಿಂದ ಸರಿಯಾಗಿ ಆಹಾರ ಇಲ್ಲದೆ ಬಲಹೀನವಾಗಿದ್ದ ಶ್ವಾನಗಳ ದೃಶ್ಯ ಕಣ್ಣೀರು ತರಿಸುವಂತ್ತಿತ್ತು. ಇದನ್ನು ತಿಳಿದು ಅಲರ್ಟ್ ಆದ ಪೀಪಲ್ಸ್ ಫಾರ್ ಅನಿಮಲ್ಸ್ ಟೀಂ ಈ ವಿಚಾರವನ್ನು ಆರ್.ಆರ್. ನಗರದ ಪೊಲೀಸರ ಗಮನಕ್ಕೆ ತಂದಿದ್ದರು.

ಪೀಪಲ್ಸ್ ಫಾರ್ ಅನಿಮಲ್ಸ್ ನ‌ ಲೀನಾ ಮತ್ತು ಹರೀಶ್ ಈ ಕುರಿತು ಪೊಲೀಸರಿಗೆ ಮಾಹಿತಿ ನೀಡಿದ್ದಾರೆ. ಬಳಿಕ ಬಿಬಿಎಂಪಿ ಪಶುಸಂಗೋಪನಾ‌ ಇಲಾಖೆಗೆ ಮಾಹಿತಿ ನೀಡಿರುವ ಪೊಲೀಸರು ಪಶುಸಂಗೋಪನೆ ಇಲಾಖೆಯ ಅಧಿಕಾರಿಗಳ ಸಹಾಯದಿಂದ ಪವಿತ್ರಾ ಮನೆಯಲ್ಲಿದ್ದ ಎರಡು ಶ್ವಾನವನ್ನು ದರ್ಶನ್ ಮನೆಗೆ ಸ್ಥಳಾಂತರಿಸಿದ್ದಾರೆ. ದರ್ಶನ್ ಮನೆಯಲ್ಲಿ ಶ್ವಾನಗಳನ್ನು ನೋಡಿಕೊಳ್ಳಲು ಕೇರ್ ಟೇಕರ್ ಗಳು ಇರುವುದರಿಂದ ಈ ಶ್ವಾನಗಳನ್ನು ದರ್ಶನ್ ಮನೆಗೆ ಸ್ಥಳಾಂತರಿಸಲಾಗಿದೆ.

ಈ ಸಂಗತಿಯ ಕುರಿತು ನಿಮ್ಮ ಅನಿಸಿಕೆ ಏನು? ಕಾಮೆಂಟ್ ಮೂಲಕ ತಿಳಿಸಿ

Continue Reading

ಬೆಂಗಳೂರು

D.K. Shivakumar: ರಾಜ್ಯಪಾಲರ ಕಚೇರಿ ರಾಜಕೀಯ ಪಕ್ಷದ ಕಚೇರಿ ಆಗಬಾರದು: ಡಿಸಿಎಂ ಡಿ.ಕೆ. ಶಿವಕುಮಾರ್

D.K. Shivakumar: ರಾಜ್ಯಪಾಲರ ಹುದ್ದೆ ಸಾಂವಿಧಾನಿಕ ಹುದ್ದೆಯಾಗಿದ್ದು ಈ ಹುದ್ದೆಯ ಘನತೆದೆ ಧಕ್ಕೆ ಬರುವಂತೆ ನಡೆದುಕೊಳ್ಳಬಾರದು ಎಂದು ಡಿ.ಕೆ.ಶಿವಕುಮಾರ್ ಅವರು ಹೇಳಿದ್ದಾರೆ.

VISTARANEWS.COM


on

D.K. Shivakumar
Koo

ಬೆಂಗಳೂರು, ಆ.31: “ರಾಜ್ಯಪಾಲರ ಹುದ್ದೆ ಸಾಂವಿಧಾನ ನೀಡಿರುವ ಪೀಠ. ರಾಜ್ಯಪಾಲರ ಕಚೇರಿ ಒಂದು ರಾಜಕೀಯ ಪಕ್ಷದ ಕಚೇರಿ ಆಗಬಾರದು. ಸಂವಿಧಾನಿಕವಾಗಿ ಈ ಹುದ್ದೆಗೆ ಇರುವ ಘನತೆದೆ ಧಕ್ಕೆ ಬರುವಂತೆ ನಡೆದುಕೊಳ್ಳಬಾರದು ಎಂಬುದು ನಮ್ಮ ಅಭಿಲಾಷೆ” ಎಂದು ಡಿಸಿಎಂ ಡಿ.ಕೆ.ಶಿವಕುಮಾರ್ (D.K. Shivakumar) ಅವರು ಹೇಳಿದರು.

Independence Day 2024
CM Siddaramaiah

ರಾಜ್ಯಪಾಲರ ಪಕ್ಷಪಾತ ಧೋರಣೆ ಖಂಡಿಸಿ ಮುಖ್ಯಮಂತ್ರಿ ಸಿದ್ದರಾಮಯ್ಯ ಹಾಗೂ ಉಪಮುಖ್ಯಮಂತ್ರಿ ಡಿ.ಕೆ. ಶಿವಕುಮಾರ್ ಅವರ ನೇತೃತ್ವದಲ್ಲಿ ಕಾಂಗ್ರೆಸ್ ಪಕ್ಷ ಶನಿವಾರ ರಾಜಭವನ ಚಲೋ ಪ್ರತಿಭಟನೆ ಹಮ್ಮಿಕೊಂಡಿತ್ತು. ಮೊದಲು ವಿಧಾನಸೌಧದ ಆವರಣದಲ್ಲಿರುವ ಗಾಂಧಿ ಪ್ರತಿಮೆ ಬಳಿ ಪ್ರತಿಭಟನೆ ನಡೆಸಿದ ಕಾಂಗ್ರೆಸ್ ನಾಯಕರು ಪ್ರತಿಭಟನೆ ನಡೆಸಿ ರಾಜ್ಯಾಪಾಲರ ವಿರುದ್ಧ ಘೋಷಣೆ ಕೂಗಿದರು. ನಂತರ ಕಾಲ್ನಡಿಗೆ ಮೂಲಕ ರಾಜಭವನಕ್ಕೆ ತೆರಳಿದ ಕಾಂಗ್ರೆಸ್ ಪಕ್ಷದ ನಿಯೋಗವು ಲೋಕಾಯುಕ್ತ ಎಸ್ ಐಟಿ ಕುಮಾರಸ್ವಾಮಿ, ಶಶಿಕಲಾ ಜೊಲ್ಲೆ, ಮುರುಗೇಶ್ ನಿರಾಣಿ ಮತ್ತು ಜನಾರ್ಧನ ರೆಡ್ಡಿ ಅವರ ವಿಚಾರಣೆಗೆ ಅನುಮತಿ ನೀಡಿ ಎಂದು ಸಲ್ಲಿಸಿರುವ ಮನವಿಗೆ ಅನುಮತಿ ನೀಡಬೇಕು ಎಂದು ಮನವಿ ಮಾಡಿದರು. ನಂತರ ಮಾಧ್ಯಮಗಳನ್ನು ಉದ್ದೇಶಿಸಿ ಮಾತನಾಡಿದ ಡಿಸಿಎಂ ಡಿ.ಕೆ.ಶಿವಕುಮಾರ್ ಅವರು “ರಾಜ್ಯಪಾಲರು ನಮಗೆ ಟೀ, ಕಾಫಿ ಮತ್ತು ಉಪಹಾರವನ್ನು ಕೊಟ್ಟು ಉಪಚರಿಸಿದರು. ಎಲ್ಲದಕ್ಕಿಂತ ಮುಖ್ಯವಾಗಿ ನಿಮಗೆ ನ್ಯಾಯ ನೀಡುತ್ತೇವೆ ಎಂದು ಭರವಸೆ ನೀಡಿದರು” ಎಂದು ತಿಳಿಸಿದರು.

“ಲೋಕಾಯುಕ್ತ ಎಸ್ ಐಟಿ ಅವರು ಮಾಜಿ ಮುಖ್ಯಮಂತ್ರಿ, ಹಾಲಿ ಕೇಂದ್ರಮಂತ್ರಿ ಕುಮಾರಸ್ವಾಮಿ ಹಾಗೂ ಮೂರು ಜನ ಮಾಜಿ ಮಂತ್ರಿಗಳ ಅಕ್ರಮಗಳ ವಿರುದ್ಧ ನ್ಯಾಯಾಲಯದ ಸೂಚನೆಯಂತೆ ಸಂಪೂರ್ಣ ತನಿಖೆ ನಡೆಸಿ ವರದಿ ನೀಡಿದ್ದಾರೆ. ಆದರೂ ಏನೂ ಕ್ರಮ ತೆಗೆದುಕೊಂಡಿಲ್ಲ. ನಮ್ಮ ಮುಖ್ಯಮಂತ್ರಿಗಳ ಮೇಲೆ ಕ್ರಮ ಕೈಗೊಳ್ಳಲು ಮುಂದಾಗುವ ರಾಜ್ಯಪಾಲರು, ಅವರ ಮೇಲೆ ಏಕೆ ಕ್ರಮ ತೆಗೆದುಕೊಂಡಿಲ್ಲ. ನೀವು ತಾರತಮ್ಯ ಎಸಗಿ ನಮ್ಮ ವಿರುದ್ಧ ಕೆಲಸ ಮಾಡಿದ್ದಾರಲ್ಲವೇ” ಎಂದು ಹೇಳಿದರು.

“ನಾಲ್ಕು ಜನರ ವಿರುದ್ಧ ಭ್ರಷ್ಟಾಚಾರ ವಿರೋಧಿ ಕಾಯ್ದೆ, 197 ಸಿಪಿಸಿ ಕಾಯ್ದೆಯಡಿ ಸೆಕ್ಷನ್ 17 ಎ ಪ್ರಕಾರ ಲೋಕಾಯುಕ್ತವು ಅನುಮತಿ ಕೇಳಿತ್ತು. ಆದರೂ ರಾಜ್ಯಪಾಲರು ಕ್ರಮ ತೆಗೆದುಕೊಳ್ಳಲಿಲ್ಲ. ಮುಖ್ಯಮಂತ್ರಿ ಸಿದ್ದರಾಮಯ್ಯ ಅವರ ವಿರುದ್ಧ ಯಾರೋ ಅರ್ಜಿ ಕೊಟ್ಟರು ಎಂದು ಒಂದೇ ದಿನದಲ್ಲಿ ತೀರ್ಮಾನ ತೆಗೆದುಕೊಂಡರು. ಆದರೆ ಮಾಜಿ ಮುಖ್ಯಮಂತ್ರಿಗಳ, ಮಂತ್ರಿಗಳ ವಿಚಾರದಲ್ಲಿ ಲೋಕಾಯುಕ್ತ ಈ ಹಿಂದೆ ಮನವಿ ಮಾಡಿದಾಗ ಎಂಟತ್ತು ದಿನಗಳಲ್ಲಿ ತನಿಖೆಗೆ ಅನುಮತಿ ನೀಡುವ ತೀರ್ಮಾನ ಮಾಡಬಹುದಿತ್ತು. ಆದರೂ ಪಕ್ಷಪಾತ ಮಾಡಿದ್ದಾರೆ. ಮುಖ್ಯಮಂತ್ರಿಗಳ ವಿರುದ್ಧ ಕ್ರಮ ತೆಗೆದುಕೊಳ್ಳ ಬೇಡಿ ಎಂದು ಸಚಿವ ಸಂಪುಟ ಮನವಿ ಮಾಡಿದ್ದರು. ರಾಜ್ಯಪಾಲರು ಮಾನ್ಯ ಮಾಡಲಿಲ್ಲ” ಎಂದು ಹೇಳಿದರು.

“ಸಾರ್ವಜನಿಕ ಜೀವನದಲ್ಲಿರುವ ರಾಜ್ಯಪಾಲರು ಎಚ್ಚರಿಕೆಯನ್ನು ಇಟ್ಟುಕೊಂಡು ಕೆಲಸ ಮಾಡಬೇಕಿತ್ತು. ಅವರು ಸಂವಿಧಾನದ ಪ್ರತಿನಿಧಿಯಾಗಿ ಕೆಲಸ ಮಾಡಬೇಕಿತ್ತೇ ಹೊರತು ಪಕ್ಷದ ಪ್ರತಿನಿಧಿಯಾಗಿ ಕೆಲಸ ಮಾಡಬಾರದಿತ್ತು. ಸಂವಿಧಾನಿಕ ಹುದ್ದೆಯನ್ನು ಸಂವಿಧಾನದ ರಕ್ಷಣೆಗೆ ಬಳಸಿಕೊಳ್ಳಬೇಕು ಎಂಬುದು ಸಾಮಾನ್ಯ ಜನರ ಅಭಿಪ್ರಾಯ” ಎಂದರು.

“ಮುಖ್ಯಮಂತ್ರಿಗಳ ವಿರುದ್ಧ ಯಾವುದೇ ಪೂರಕ ದಾಖಲೆಗಳಿಲ್ಲ. ಕುಮಾರಸ್ವಾಮಿ ಅವರು ಸೇರಿದಂತೆ ಮೂರು ಜನ ಮಂತ್ರಿಗಳ ವಿರುದ್ಧ ದಾಖಲೆ ಇದ್ದರೂ ರಾಜ್ಯಪಾಲರು ಪಕ್ಷಪಾತ ಏಕೆ ಮಾಡಿದರು. ರಾಜ್ಯಪಾಲರ ಕಚೇರಿ ಸಮಾನತೆ ಹೆಸರಾಗಿರಬೇಕು. ಸಾಂವಿಧಾನಿಕ ಪೀಠಕ್ಕೆ ಇರುವ ಗೌರವ ಉಳಿಯಬೇಕು. ಎಂದು ನಾವು ರಾಜಭವನ ಚಲೋ ಮಾಡಿದ್ದೇವೆ. ನ್ಯಾಯದ ಪರವಾಗಿ ಧ್ವನಿ ಎತ್ತಲು ನಾವು ಮುಂದಾಗಿದ್ದೇವೆ.” ಎಂದು ಹೇಳಿದರು.

“ನಾವ್ಯಾರು ಇಲ್ಲಿ ಶಾಶ್ವತವಲ್ಲ. ರಾಜ್ಯಪಾಲರ ಭವನ ರಾಜಕೀಯ ಕಚೇರಿ ಆಗಬಾರದು ಎಂಬುದಷ್ಟೇ ನಮ್ಮ ಕಾಳಜಿ. ರಾಜ್ಯಪಾಲರ ಸ್ಥಾನ ನ್ಯಾಯಯುತವಾದ ಪೀಠ. ಸರ್ಕಾರವನ್ನು ರಚನೆ ಮಾಡುವ ಪೀಠ. ನ್ಯಾಯಾಲಯದ ಸ್ಥಾನಮಾನ ಹೊಂದಿರುವ ಪೀಠ. ರಾಜ್ಯಪಾಲರ ಕಚೇರಿ ಬಳಸಿಕೊಂಡು, ಬಹುಮತದಿಂದ ಆಯ್ಕೆಯಾದ ಕಾಂಗ್ರೆಸ್ ಸರ್ಕಾರವನ್ನು ಬೀಳಿಸಲು ಹುನ್ನಾರ ಮಾಡಲಾಗುತ್ತಿದೆ. ಕರ್ನಾಟಕ ತಾನು ಬೆಳೆದು ಅನೇಕ ರಾಜ್ಯಗಳ ಬೆಳವಣಿಗೆಗೂ ಸಹಾಯ ಮಾಡುತ್ತಿದೆ. ಇಂತಹ ಸರ್ಕಾರವನ್ನು ಅಸ್ಥಿರಗೊಳಿಸುವ ಪ್ರಯತ್ನ ರಾಜ್ಯಪಾಲರ ಕಚೇರಿಯಿಂದ ಆಗಬಾರದು ಎಂಬುದಷ್ಟೇ ನಮ್ಮ ಕಾಳಜಿ” ಎಂದರು.

ಇದನ್ನೂ ಓದಿ: R. Ashoka: ರಾಜಭವನ ಬಿಜೆಪಿ ಕಚೇರಿಯಾದರೆ, ವಿಧಾನಸೌಧ ಕಾಂಗ್ರೆಸ್ ಕಚೇರಿ- ಆರ್ ಅಶೋಕ್ ಕಿಡಿ

“ನಾಲ್ಕು ಜನರ ವಿರುದ್ಧ ವಿಚಾರಣೆಗೆ ಅನುಮತಿ ನೀಡಬೇಕು. ರಾಜ್ಯಪಾಲರ ಕಚೇರಿ ಘನತೆಯನ್ನು ಉಳಿಸಿಕೊಳ್ಳಬೇಕು. ಕಾನೂನನ್ನು ಉಳಿಸಬೇಕು, ರಾಜ್ಯಪಾಲರ ಹುದ್ದೆಗೆ ಇರುವ ಘನತೆ, ಗೌರವವನ್ನು ಉಳಿಸಬೇಕು. ಪಕ್ಷಪಾತ ಧೋರಣೆ ಮಾಡದೆ ಕೆಲಸ ಮಾಡಬೇಕು ಎಂದು ಮನದಟ್ಟು ಮಾಡಿದ್ದೇವೆ. ಹಾಗೂ ನನ್ನ ಅಧ್ಯಕ್ಷತೆಯಲ್ಲಿ ನಡೆದ ಕ್ಯಾಬಿನೆಟ್ ಸಭೆಯ ನಿರ್ಧಾರಗಳನ್ನು ಪರಿಗಣಿಸಬೇಕು ಎಂದು ಮನವಿ ಮಾಡಿದ್ದೇವೆ” ಎಂದರು.

“ನನ್ನ ಬಳಿ ಯಾವುದೇ ಪ್ರಕರಣಗಳ ಬಾಕಿ ಇಲ್ಲ ಎಂದು ರಾಜ್ಯಪಾಲರು ತಿಳಿಸಿದ್ದಾರೆ. ರಾಜ್ಯಪಾಲರು ಏಕೆ ಹೀಗೆ ಹೇಳುತ್ತಿದ್ದಾರೆ ಎಂದು ಮತ್ತೊಮ್ಮೆ ಪರಿಶೀಲನೆ ಮಾಡಲಾಗುವುದು. ಇದು ನಿಜವೋ ಸುಳ್ಳೋ ಕಳಿಸಿರುವುದು ನಿಜವೋ, ಸುಳ್ಳು ಎಂದು ಪರಿಶೀಲಿಸಲಾಗುವುದು. ಅಥವಾ ಒಂದಷ್ಟು ವಿಚಾರದಲ್ಲಿ ಅವರು ಸ್ಪಷ್ಟನೆ ಕೇಳಿರಬಹುದು ಇದನ್ನು ಸಹ ನಾವು ಪರಿಶೀಲಿಸುತ್ತೇವೆ” ಎಂದು ತಿಳಿಸಿದರು.

CM Siddaramaiah

“ಸಿದ್ದರಾಮಯ್ಯ ಅವರ ಕೇಸಿನ ವಿಚಾರದಲ್ಲಿ ನಾವು ರಾಜಭವನ ಚಲೋ ಹಮ್ಮಿಕೊಂಡಿಲ್ಲ. ಈ ಪ್ರಕರಣ ನ್ಯಾಯಾಲಯದಲ್ಲಿ ಇದ್ದು. ಅಲ್ಲಿ ನಮ್ಮ ಹೋರಾಟವನ್ನು ಮಾಡುತ್ತಾ ಇದ್ದೀವೆ. ಅಲ್ಲಿ ತೀರ್ಮಾನವಾದ ನಂತರ ಪ್ರತಿಕ್ರಿಯೆ ನೀಡುತ್ತೇವೆ” ಎಂದರು.

ಪ್ರಾಸಿಕ್ಯೂಷನ್ ಗೆ ಅನುಮತಿ ನೀಡದೆ ಬೇರೆ ದಾರಿ ಇಲ್ಲ

ರಾಜ್ಯಪಾಲರ ಸ್ಪಂದನೆಯಿಂದ ನ್ಯಾಯ ದೊರೆಯುತ್ತದೆ ಎನ್ನುವ ಭರವಸೆ ಮೂಡಿದೆಯೇ ಎಂದು ಕೇಳಿದಾಗ “ನಾವು ನಮ್ಮ ಕರ್ತವ್ಯವನ್ನು ಮಾಡಿದ್ದೇವೆ. ನಾವು ರಾಜ್ಯದ ಜನತೆಯ ಹಿತಕ್ಕಾಗಿ ಹೋರಾಟ ಮಾಡುತ್ತಿದ್ದೇವೆ. ರಾಜ್ಯಪಾಲರ ಬಳಿ ಪರ್ಯಾಯ ದಾರಿಗಳಿಲ್ಲ. ಅವರು ನಾಲ್ವರ ವಿರುದ್ಧ ಪ್ರಾಸಿಕ್ಯೂಷನ್ ಗೆ ಅನುಮತಿ ನೀಡಲೇಬೇಕು” ಎಂದರು. ಅರ್ಜಿಗಳು ಇತ್ಯರ್ಥ ಆಗಿದ್ದಾವೆ ಎಂದು ರಾಜ್ಯಪಾಲರು ನಿಮಗೆ ತಿಳಿಸಿದ್ದಾರೆಯೇ ಎಂದಾಗ “ಒಳಗಿನ ವಿಚಾರವನ್ನು ನಾನು ನಿಮ್ಮ ಬಳಿ ಚರ್ಚೆ ಮಾಡುವುದಿಲ್ಲ. ಅವರು ನನ್ನ ಬಳಿ ಯಾವುದೇ ಅರ್ಜಿಗಳಿಲ್ಲ ಎಂದು ಹೇಳಿದ್ದಾರೆ ಅದನ್ನು ನಾವು ಪರಿಶೀಲಿಸುತ್ತೇವೆ” ಎಂದರು.

Continue Reading
Advertisement
UPSC
ಪ್ರಮುಖ ಸುದ್ದಿ46 mins ago

CET/NEET: ಮೊದಲ ಬಾರಿಗೆ ಆನ್ ಲೈನ್ ಪಾವತಿ ಜಾರಿ, ಒಳ್ಳೆಯ ಪ್ರತಿಕ್ರಿಯೆ

TA Saravana elected as new chairman of government assurances committee
ಕರ್ನಾಟಕ1 hour ago

TA Sharavana : ಸರ್ಕಾರಿ ಭರವಸೆಗಳ ಸಮಿತಿಯ ನೂತನ ಅಧ್ಯಕ್ಷರಾಗಿ ಟಿ.ಎ ಶರವಣ ಆಯ್ಕೆ

Hair Care Habits
ಆರೋಗ್ಯ1 hour ago

Amla For Your Hair: ತಲೆಗೂದಲ ಆರೈಕೆಯಲ್ಲಿ ನೆಲ್ಲಿಕಾಯಿಯ ಬಳಕೆ ಹೇಗೆ?

Sakhi Mahila Sangathan celebrates Raksha Sutra Diwas
ಬೆಂಗಳೂರು2 hours ago

Bengaluru News : ರಕ್ಷಾ ಸೂತ್ರ ದಿನ ಆಚರಿಸಿದ ಸಖಿ ಮಹಿಳಾ ಸಂಘಟನೆ

Sonal Monteiro
ಸಿನಿಮಾ2 hours ago

Sonal Monteiro: ಚರ್ಚ್ ವೆಡ್ಡಿಂಗ್‌ಗೂ ಮುನ್ನ ಸೋನಲ್ ಮನೆಯಲ್ಲಿ Roce Celebration

karnataka weather Forecast
ಮಳೆ2 hours ago

Karnataka Weather : ಕಲಬುರಗಿಯಲ್ಲಿ ಮಳೆ ಅಬ್ಬರ; ರಾಯಚೂರಿನಲ್ಲಿ ಕೊಚ್ಚಿ ಹೋದ ಸೇತುವೆ

Renuka Swamy murder case Pavithra Gowdas bail plea rejected
ಸ್ಯಾಂಡಲ್ ವುಡ್3 hours ago

Pavitra Gowda : ರೇಣುಕಾ ಸ್ವಾಮಿ ಕೊಲೆ ಕೇಸ್‌; ಪವಿತ್ರಾಗೌಡ ಸಲ್ಲಿಸಿದ ಜಾಮೀನು ಅರ್ಜಿ ವಜಾ

D.K. Shivakumar
ಬೆಂಗಳೂರು3 hours ago

D.K. Shivakumar: ರಾಜ್ಯಪಾಲರ ಕಚೇರಿ ರಾಜಕೀಯ ಪಕ್ಷದ ಕಚೇರಿ ಆಗಬಾರದು: ಡಿಸಿಎಂ ಡಿ.ಕೆ. ಶಿವಕುಮಾರ್

Monsoon Skincare
ಆರೋಗ್ಯ3 hours ago

Home Remedies for Skin: ಮುಖದ ಕಾಂತಿ ಹೆಚ್ಚಿಸಿಕೊಳ್ಳುವುದು ಹೇಗೆ?

ahoratri dharani until the guilts are punished says Opposition party Leader R Ashok
ಪ್ರಮುಖ ಸುದ್ದಿ4 hours ago

R. Ashoka: ರಾಜಭವನ ಬಿಜೆಪಿ ಕಚೇರಿಯಾದರೆ, ವಿಧಾನಸೌಧ ಕಾಂಗ್ರೆಸ್ ಕಚೇರಿ- ಆರ್ ಅಶೋಕ್ ಕಿಡಿ

Kannada Serials
ಕಿರುತೆರೆ11 months ago

Kannada Serials TRP: 2ನೇ ಸ್ಥಾನದಲ್ಲಿ 2 ಧಾರಾವಾಹಿಗಳು; ಟಿಆರ್‌ಪಿ ರೇಸ್‌ನಲ್ಲಿಲ್ಲ ಭಾಗ್ಯಲಕ್ಷ್ಮೀ!

Sharmitha Gowda in bikini
ಕಿರುತೆರೆ11 months ago

Geetha Serial Kannada: ನಿದ್ದೆ ಕದ್ದ ಚೋರಿ! ನಟಿ `ಭಾನುಮತಿ’ ಹಾಟ್‌ ಪೋಟೊಗಳಿಗೆ ಫ್ಯಾನ್ಸ್ ಫುಲ್ ಫಿದಾ

Bigg Boss- Saregamapa 20 average TRP
ಕಿರುತೆರೆ11 months ago

Kannada Serials TRP: ಏಳನೇ ಸ್ಥಾನಕ್ಕೆ ʻಅಮೃತಧಾರೆʼ ಕುಸಿತ; ಬಿಗ್‌ ಬಾಸ್‌-ಸರಿಗಮಪ ಟಿಆರ್‌ಪಿ ಎಷ್ಟು?

Kannada Serials
ಕಿರುತೆರೆ11 months ago

Kannada Serials TRP: ನಾಲ್ಕನೇ ಸ್ಥಾನಕ್ಕೆ ಕುಸಿತ ಕಂಡ ʻಸೀತಾ ರಾಮʼ; ಟಿಆರ್‌ಪಿ ರೇಸ್‌ಗೆ ʻಭಾಗ್ಯಲಕ್ಷ್ಮಿʼ ಬ್ಯಾಕ್‌!

Kannada Serials
ಕಿರುತೆರೆ11 months ago

Kannada Serials TRP: ಟಿಆರ್‌ಪಿಯಲ್ಲಿ ʻಭಾಗ್ಯಲಕ್ಷ್ಮೀʼ ಹವಾ; ʻಪುಟ್ಟಕ್ಕನ ಮಕ್ಕಳುʼ ಧಾರಾವಾಹಿಗೆ ಸಂಕಷ್ಟ!

galipata neetu
ಕಿರುತೆರೆ9 months ago

Kanyadana Serial: ಕಿರುತೆರೆಗೆ ಮತ್ತೆ ಎಂಟ್ರಿ ಕೊಟ್ಟ ʻಗಾಳಿಪಟʼ ಖ್ಯಾತಿಯ ʻನೀತುʼ!

Bigg Boss' dominates TRP; Sita Rama fell to the sixth position
ಕಿರುತೆರೆ10 months ago

Kannada Serials TRP: ಟಿಆರ್‌ಪಿಯಲ್ಲಿ ʻಬಿಗ್ ಬಾಸ್ʼದೇ ಮೇಲುಗೈ; 6ನೇ ಸ್ಥಾನಕ್ಕೆ ಕುಸಿದ ʻಸೀತಾ ರಾಮʼ

geetha serial Dhanush gowda engagement
ಕಿರುತೆರೆ9 months ago

Dhanush Gowda: ಗೀತಾ ಧಾರಾವಾಹಿ ನಟನ ನಿಶ್ಚಿತಾರ್ಥ; ಭವ್ಯಾಳ ಕಮೆಂಟ್‌ ಬಾಕ್ಸ್‌ ಆಫ್‌!

Kannada Serials
ಕಿರುತೆರೆ12 months ago

Kannada Serials TRP: ಟಿಆರ್‌ಪಿಯಲ್ಲಿ ಏರಿಕೆ ಕಂಡ ʻಅಮೃತಧಾರೆʼ; ʻಗಟ್ಟಿಮೇಳʼಕ್ಕೆ ನಾಲ್ಕನೇ ಸ್ಥಾನ!

varun
ಕಿರುತೆರೆ10 months ago

Brindavana Serial: ʼಬೃಂದಾವನʼ ಧಾರಾವಾಹಿಯಲ್ಲಿ ದೊಡ್ಡ ಟ್ವಿಸ್ಟ್‌; ಪ್ರಮುಖ ಪಾತ್ರಧಾರಿಯೇ ಬದಲು

Sudeep's birthday location shift
ಸ್ಯಾಂಡಲ್ ವುಡ್7 hours ago

Kichcha Sudeepa: ಸುದೀಪ್‌ ಬರ್ತ್‌ ಡೇ ಲೊಕೇಶನ್‌ ಶಿಫ್ಟ್; ದರ್ಶನ್‌ ಭೇಟಿಗೆ ಬಳ್ಳಾರಿ ಜೈಲಿಗೆ ಹೋಗ್ತಾರಾ ಕಿಚ್ಚ

Actor Darshan
ಸ್ಯಾಂಡಲ್ ವುಡ್2 days ago

Actor Darshan : ಬಿಗಿ ಭದ್ರತೆಯಲ್ಲಿ ಪರಪ್ಪನ ಅಗ್ರಹಾರದಿಂದ ದರ್ಶನ್‌ ಬಳ್ಳಾರಿಗೆ ಸ್ಥಳಾಂತರ; ಸೆಲ್‌ನಲ್ಲಿ ಏನೆಲ್ಲ ವ್ಯವಸ್ಥೆ ಇದೆ ಗೊತ್ತಾ?

ಮಳೆ1 week ago

Karnataka rain : ವಿಜಯನಗರದಲ್ಲಿ ಮಳೆ ಅವಾಂತರ; ಹರಿಯುವ ಹಳ್ಳದಲ್ಲೇ ಶವ ಸಾಗಿಸಿದ ಗ್ರಾಮಸ್ಥರು

karnataka Weather Forecast
ಮಳೆ3 weeks ago

Karnataka Weather : ಭೀಮಾನ ಅಬ್ಬರಕ್ಕೆ ನಲುಗಿದ ನೆರೆ ಸಂತ್ರಸ್ತರು; ನಾಳೆಗೆ ಇಲ್ಲೆಲ್ಲ ಮಳೆ ಅಲರ್ಟ್‌

Bellary news
ಬಳ್ಳಾರಿ3 weeks ago

Bellary News : ಫಿಲ್ಮಂ ಸ್ಟೈಲ್‌ನಲ್ಲಿ ಕಾಡಿನಲ್ಲಿ ನಿಧಿ ಹುಡುಕಾಟ; ಅತ್ಯಾಧುನಿಕ ಟೆಕ್ನಾಲಜಿ ಬಳಕೆ ಮಾಡಿದ ಖದೀಮರ ಗ್ಯಾಂಗ್‌

Maravoor bridge in danger Vehicular traffic suspended
ದಕ್ಷಿಣ ಕನ್ನಡ3 weeks ago

Maravoor Bridge : ಕಾಳಿ ನದಿ ಸೇತುವೆ ಬಳಿಕ ಅಪಾಯದಲ್ಲಿದೆ ಮರವೂರು ಸೇತುವೆ; ವಾಹನ ಸಂಚಾರ ಸ್ಥಗಿತ

Wild Animals Attack
ಚಿಕ್ಕಮಗಳೂರು4 weeks ago

Wild Animals Attack : ಮಲೆನಾಡಲ್ಲಿ ಕಾಡಾನೆಯ ದಂಡು; ತೋಟಕ್ಕೆ ತೆರಳುವ ಕಾರ್ಮಿಕರಿಗೆ ಎಚ್ಚರಿಕೆ

Karnataka Weather Forecast
ಮಳೆ4 weeks ago

Karnataka Weather : ಮಳೆಯಾಟಕ್ಕೆ ಮುಂದುವರಿದ ಮಕ್ಕಳ ಗೋಳಾಟ; ಆಯ ತಪ್ಪಿದರೂ ಜೀವಕ್ಕೆ ಅಪಾಯ

assault case
ಬೆಳಗಾವಿ4 weeks ago

Assault Case : ಬೇರೊಬ್ಬ ಯುವತಿ ಜತೆಗೆ ಸಲುಗೆ; ಪ್ರಶ್ನಿಸಿದ್ದಕ್ಕೆ ಪತ್ನಿಗೆ ಮನಸೋ ಇಚ್ಛೆ ಥಳಿಸಿದ ಪಿಎಸ್‌ಐ

karnataka rain
ಮಳೆ4 weeks ago

Karnataka Rain : ಕಾರವಾರದ ಸುರಂಗ ಮಾರ್ಗದಲ್ಲಿ ಕುಸಿದ ಕಲ್ಲು; ಟನೆಲ್‌ ಬಂದ್‌ ಮಾಡಿದ ಪೊಲೀಸರು

ಟ್ರೆಂಡಿಂಗ್‌