Blast in Bengaluru : ರಾಮೇಶ್ವರಂ ಕೆಫೆಯಲ್ಲಿ ಬಾಂಬ್‌ ಇಟ್ಟ ಟೋಪಿವಾಲಾ 50 ಗಂಟೆ ಕಳೆದರೂ ಸಿಕ್ಕಿಲ್ಲ! - Vistara News

ಬೆಂಗಳೂರು

Blast in Bengaluru : ರಾಮೇಶ್ವರಂ ಕೆಫೆಯಲ್ಲಿ ಬಾಂಬ್‌ ಇಟ್ಟ ಟೋಪಿವಾಲಾ 50 ಗಂಟೆ ಕಳೆದರೂ ಸಿಕ್ಕಿಲ್ಲ!

Blast in Bengaluru : ರಾಮೇಶ್ವರಂ ಕೆಫೆಯಲ್ಲಿ ಬಾಂಬಿಟ್ಟು ಪರಾರಿಯಾದ ದುಷ್ಟನಿಗಾಗಿ ಬೆಂಗಳೂರು ಪೊಲೀಸರು ಭಾರಿ ಹುಡುಕಾಟ ನಡೆಸುತ್ತಿದ್ದಾರೆ. ಆದರೆ, ಘಟನೆ ನಡೆದು 50 ಗಂಟೆ ಕಳೆದರೂ ಆರೋಪಿ ಸಿಕ್ಕಿಲ್ಲ.

VISTARANEWS.COM


on

Blast in Bengaluru Accused still Missing
ಮಹತ್ವದ, ಕುತೂಹಲಕರ ಸುದ್ದಿಗಾಗಿ ಫಾಲೊ ಮಾಡಿ
Koo

ಬೆಂಗಳೂರು: ಬೆಂಗಳೂರು ನಗರದಲ್ಲಿ ಆತಂಕದ ಅಲೆಗಳನ್ನು ಸೃಷ್ಟಿಸಿದ ವೈಟ್‌ ಫೀಲ್ಡ್‌ ಸಮೀಪದ ಬ್ರೂಕ್‌ ಫೀಲ್ಡ್‌ನ ರಾಮೇಶ್ವರಂ ಕೆಫೆ (Rameshwaram Cafe) ಬಾಂಬ್ ಬ್ಲಾಸ್ಟ್ ಪ್ರಕರಣದ (Blast in Bengaluru) ರೂವಾರಿ ಟೋಪಿವಾಲಾ ಘಟನೆ ನಡೆದು 50 ಗಂಟೆ ಕಳೆದರೂ ಇನ್ನೂ ಸಿಕ್ಕಿಲ್ಲ (Accused still Missing). ನೂರಾರು ಸಿಸಿಟಿವಿಗಳ ಪರಿಶೀಲನೆ, ಹಲವಾರು ತಂಡಗಳ ಹುಡುಕಾಟದ ಹೊರತಾಗಿಯೂ ಸಿಕ್ಕಿದ ಫಲಿತಾಂಶ ಶೂನ್ಯ. ಮಾರ್ಚ್‌ 1ರಂದು ಮಧ್ಯಾಹ್ನ 12.55ಕ್ಕೆ ಹತ್ತು ಸೆಕೆಂಡುಗಳ ಅಂತರದಲ್ಲಿ ಅವಳಿ ಸ್ಫೋಟಗಳು ಸಂಭವಿಸಿ 10 ಮಂದಿ ಗಾಯಗೊಂಡ ಘಟನೆ ಇದಾಗಿದ್ದು, ಆ ಕ್ಷಣದಿಂದಲೇ ಬಾಂಬ್‌ ಇಟ್ಟ ಆ ದುಷ್ಟನಿಗಾಗಿ ಎಲ್ಲ ಕಡೆ ಹುಡುಕಾಟ ನಡೆಯುತ್ತಿದೆ. ಆದರೆ, ಇನ್ನೂ ಅದು ಯಶಸ್ವಿಯಾಗಿಲ್ಲ. ಹಾಗಿದ್ದರೆ ಎಲ್ಲ ಪೊಲೀಸರ ಎಲ್ಲ ತಾಂತ್ರಿಕ ಶಕ್ತಿ ಮತ್ತು ನೈಪುಣ್ಯತೆಗಳನ್ನು ಮೀರಿ ಹೇಗೆ ತಪ್ಪಿಸಿಕೊಂಡಿದ್ದಾನೆ?

ನಿಜವೆಂದರೆ ಬಾಂಬ್‌‌ ತಂದಿಟ್ಟವನು ಯಾರು ಎನ್ನುವುದು ರಾಮೇಶ್ವರಂ ಕೆಫೆಯ ಸಿಸಿ ಟಿವಿಯಲ್ಲೇ ದಾಖಲಾಗಿತ್ತು. ಟೋಪಿವಾಲಾನೊಬ್ಬ ಹೋಟೆಲ್‌ಗೆ ಬರುವುದು, ಅಲ್ಲಿ ರವಾ ಇಡ್ಲಿ ತೆಗೆದುಕೊಳ್ಳುವುದು, ಒಂದು ಚೀಲವನ್ನು ಕಸದ ಡಬ್ಬಿಯಲ್ಲಿ ಇಡುವುದು ಮತ್ತು ಅಲ್ಲಿಂದ ವೇಗವಾಗಿ ಹೊರಟು ಹೋಗುವ ಸನ್ನಿವೇಶಗಳು ಸ್ಪಷ್ಟವಾಗಿ ದಾಖಲಾಗಿವೆ. ಅದರ ಜತೆಗೆ ಆತ ಒಂದು ಬಸ್‌ನಲ್ಲಿ ಬಂದಿದ್ದ ಎಂಬುದಕ್ಕೆ ಬಿಎಂಟಿಸಿ ಕೂಡಾ ದಾಖಲೆ ನೀಡಿದೆ.

ಇದಿಷ್ಟೂ ದಾಖಲೆಗಳನ್ನು ಹಿಡಿದುಕೊಂಡು ಸಿಸಿಬಿ ಹಾಗೂ ಇಂಜೆಲಿಜನ್ಸ್ ಅಧಿಕಾರಿಗಳ ತಂಡ ಆರೋಪಿಯ ಪತ್ತೆಗೆ ಫೀಲ್ಡ್ ಗಿಳಿದಿದ್ದರು. ಟವರ್ ಡಂಪ್, ಸಿಡಿಆರ್ ಅನಾಲಿಸಿಸ್ ಮಾಡಿ ವಿವಿಧ ಆಯಾಮಗಳಲ್ಲಿ ವಿಶ್ಲೇಷಣೆ ಮಾಡಿ ಪ್ರತ್ಯೇಕ ತಂಡಗಳಿಂದ ಕಾರ್ಯಾಚರಣೆ ನಡೆಸಲಾಗುತ್ತಿದೆ. ಅಷ್ಟಾದ್ರೂ ಆರೋಪಿಯ ಬಗ್ಗೆ ಒಂದೇ ಒಂದು ಸುಳಿವು ಸಿಕ್ಕಿಲ್ಲವಂತೆ.

ಅವನು ದೊಡ್ಡ ಪ್ಲ್ಯಾನನ್ನೇ ಮಾಡಿದ್ದ!

ನಿಜವೆಂದರೆ ಆರೋಪಿ 11.30ರ ಸುಮಾರಿಗೆ ರಾಮೇಶ್ವರಂ ಕೆಫೆಗೆ ಬಂದಿದ್ದಾನೆ. ಬಂದ ಬಳಿಕ ಬಾಂಬ್ ಸ್ಪೋಟಗೊಳ್ಳುವಷ್ಟರಲ್ಲಿ ಸಿಟಿಯಿಂದ ಹೊರ ಹೋಗುವ ಪ್ಲಾನ್ ಮಾಡಿದ್ದ ಎನ್ನುವುದು ಸ್ಪಷ್ಟವಾಗಿದೆ. ಅದರಂತೆ ರಾಮೇಶ್ವರಂ ಕೆಫೆಯಿಂದ ಹೊಸೂರು ಬಾರ್ಡರ್ ಗೆ ಹೋಗೋಕೆ 59 ನಿಮಿಷಗಳು ಬೇಕು. ಒಂದು ವೇಳೆ ಟ್ರಾಫಿಕ್ ಇದ್ರೂ 1 ಗಂಟೆ 15 ನಿಮಿಷದಲ್ಲಿ ರೀಚ್ ಆಗಬಹುದು. ಹೀಗಾಗಿ ಒಂದೂವರೆ ಗಂಟೆಯಲ್ಲಿ ಬೆಂಗಳೂರು ಬಿಟ್ಟು ಹೊರಹೋಗಲು ಫ್ಲಾನ್ ಮಾಡಿರೋ ಶಂಕೆ ಇದೆ. ಹೀಗಾಗಿ ಒಂದೂವರೆ ಗಂಟೆ ಟೈಂ ಇಟ್ಟುಕೊಂಡು ಟೈಮರ್ ಫಿಕ್ಸ್ ಮಾಡಿರುವ ಸಾಧ್ಯತೆ ಇದೆ.

ಬ್ಲಾಸ್ಟ್ ಆದ ಬಳಿಕ ಪೊಲೀಸರ ಸ್ಥಳಕ್ಕೆ ಬರುವುದಕ್ಕೆ ಕನಿಷ್ಠ 10 ನಿಮಿಷಗಳು ಬೇಕು. ಬಳಿಕ ಎಲ್ಲಾ ಕಡೆ ಅಲರ್ಟ್ ಮಾಡುವುದಕ್ಕೆ ಅರ್ಧ ಗಂಟೆ ತೆಗೆದುಕೊಳ್ಳುತ್ತಾರೆ. ಪೊಲೀಸರು ನಗರದಾದ್ಯಂತ ಅಲರ್ಟ್ ಆಗೋ ಅಷ್ಟರಲ್ಲಿ ಗಡಿ ದಾಡೋ ಫ್ಲಾನ್ ಮಾಡಿರುವ ಶಂಕೆ ಇದೆ. ಬ್ಲಾಸ್ಟ್ ಆಗಿದ್ದೇ ಎಲ್ಲಾ ಕಡೆ ಅಲರ್ಟ್ ಆಗಿ ಬಾರ್ಡರ್ ನಲ್ಲೂ ನಾಕಾಬಂದಿ ಹಾಕ್ತಾರೆ. ಹೀಗಾಗಿ ಗಡಿ ದಾಟಿದ ಬಳಿಕ ನಾಕಾಬಂದಿ ಹಾಕಿದರೂ ನಾನು ಸಿಗಲ್ಲ ಅನ್ನೋ ರೀತಿ
ಪ್ರತಿ ಹೆಜ್ಜೆ ಹೆಜ್ಜೆಗೂ ಮಾಸ್ಟರ್ ಫ್ಲಾನ್ ಮಾಡಿರುವಂತಿದೆ ಆರೋಪಿ.

ಇದನ್ನೂ ಓದಿ : Blast in Bengaluru : ಬ್ರಾಂಡ್‌ ಬೆಂಗಳೂರು VS ಬಾಂಬ್‌ ಬೆಂಗಳೂರು; ಬಿಜೆಪಿ ಲೇವಡಿಗೆ ಡಿಕೆಶಿ ಗರಂ

ಸಾವಿರಕ್ಕೂ ಅಧಿಕ ಸಿಸಿ ಟಿವಿ ಪರಿಶೀಲನೆ, ಶರ್ಟ್‌ ಬದಲಿಸಿದನಾ ಆರೋಪಿ?

ಬಾಂಬ್ ಇಟ್ಟ ಬಳಿಕ ಆರೋಪಿ ಯಾವ ಮಾರ್ಗದಲ್ಲಿ ಹೋಗಿದ್ದಾನೆ ಅನ್ನುವ ಸುಳಿವು ಯಾರಿಗೂ ಇಲ್ಲ. ಹೀಗಾಗಿ ರಾಮೇಶ್ವರಂ ಕೆಫೆ ಯಿಂದ ತಮಿಳುನಾಡು ಬಾರ್ಡರ್ ವರೆಗಿನ ಹಾಗೂ ಕೆಫೆಯಿಂದ ವೈಟ್ ಫೀಲ್ಡ್ ಮಾರ್ಗದಲ್ಲಿ ಚೆನ್ನಸಂದ್ರ, ಸರ್ಜಾಪುರ ಮಾರ್ಗದಲ್ಲಿ ಸಾವಿರಕ್ಕು ಹೆಚ್ಚು ಸಿಸಿಟಿವಿಗಳನ್ನು ಸರ್ಚ್ ಮಾಡಿದ್ದು, ಯಾವುದೇ ಸುಳಿವು ಸಿಗದೇ ತಲೆಕೆಡಿಸಿಕೊಂಡಿದ್ದಾರೆ.

ಮತ್ತೊಂದೆಡೆ ಆರೋಪಿ ಬಾಂಬ್ ಇಡುವ ವೇಳೆ ಧರಿಸಿದ್ದ ಶರ್ಟ್ ಹಾಗೂ ಪ್ಯಾಂಟ್‌ ಬದಲಾಯಿಸಿದ್ದಾನೆ ಅನ್ನೋ ಶಂಕೆಯೂ ಇದೆ. ಅಷ್ಟೇ ಅಲ್ಲದೇ ಎರಡು ಮೂರು ಬಸ್‌ಗಳನ್ನು ಬದಲಾಯಿಸಿ, ರಾಜ್ಯದ ಗಡಿ ಬಿಟ್ಟು ಹೊರ ರಾಜ್ಯಕ್ಕೆ ಎಸ್ಕೇಪ್ ಆಗಿರೊ‌ ಮಾಹಿತಿ ಸಿಕ್ಕಿದೆ. ಹೀಗಾಗಿ ಮಹಾರಾಷ್ಟ್ರ ಹಾಗೂ ತೆಲಂಗಾಣ ಎಟಿಸಿ ಹಾಗೂ ಕೌಂಟರ್ ಇಂಟಲಿಜೆನ್ಸ್ ಸೆಲ್ ಟೀಂ ಸಂಪರ್ಕದಲ್ಲಿ ಬೆಂಗಳೂರು ಪೊಲೀಸರು ಸ್ಥಳೀಯ ಪೊಲೀಸರನ್ನು ಸಂಪರ್ಕಿಸಿ ಕಾರ್ಯಾಚರಣೆ ಮುಂದುವರಿಸಿದ್ದಾರೆ.

ಕ್ಷಣ ಕ್ಷಣದ ಮಾಹಿತಿಗಾಗಿ Vistara News FaceBook ಪೇಜ್ ಫಾಲೋ ಮಾಡಿ
ಮಹತ್ವದ ಮಾಹಿತಿಗಾಗಿ ವಿಸ್ತಾರ ನ್ಯೂಸ್ ಆ್ಯಪ್ ಉಚಿತವಾಗಿ ಡೌನ್ ಲೋಡ್ ಮಾಡಿಕೊಳ್ಳಿ: Andriod App | IOS App
Continue Reading
Click to comment

Leave a Reply

Your email address will not be published. Required fields are marked *

ಪ್ರಮುಖ ಸುದ್ದಿ

Prajwal Revanna Case: ಪ್ರಜ್ವಲ್‌ ರೇವಣ್ಣ ಮೊಬೈಲ್‌ ಮಂಗಮಾಯ! ಏನಂತಾರೆ ಪ್ರಜ್ವಲ್ಲು?

Prajwal Revanna Case: ಪ್ರಜ್ವಲ್‌ ರೇವಣ್ಣ ಅಚ್ಚರಿಯ ಹೇಳಿಕೆಯೊಂದನ್ನು ನೀಡಿದ್ದು, ತಮ್ಮ ಮೊಬೈಲ್‌ ಕಳೆದುಹೋಗಿದೆ ಎಂದಿದ್ದಾರೆ. ತಮ್ಮ ಮೊಬೈಲ್‌ ಒಂದು ವರ್ಷದ ಹಿಂದೆಯೇ ಕಳೆದುಹೋಗಿದ್ದು, ಆ ಕುರಿತು ಹೊಳೆನರಸೀಪುರ ಠಾಣೆಯಲ್ಲಿ ಮೊಬೈಲ್ ಕಳ್ಳತನದ ಬಗ್ಗೆ ದೂರು ನೀಡಿರುವುದಾಗಿಯೂ ಹೇಳಿದ್ದಾರೆ.

VISTARANEWS.COM


on

prajwal revanna case mobile
Koo

ಬೆಂಗಳೂರು: ಲೈಂಗಿಕ ದೌರ್ಜನ್ಯ ಪ್ರಕರಣ (physical abuse) ಎದುರಿಸುತ್ತಿರುವ ಹಾಸನ ಸಂಸದ ಪ್ರಜ್ವಲ್ ರೇವಣ್ಣ (Hassan MP Prajwal Revanna case) ನಿನ್ನೆ ಇಡೀ ಕೋರ್ಟ್‌ ಹಾಗೂ ವೈದ್ಯಕೀಯ ಪರೀಕ್ಷೆಗಳ (medical test) ನಡುವೆ ಸಮಯ ಕಳೆದರು. ಈ ನಡುವೆ ಎಸ್‌ಐಟಿ (SIT) ಹಲವಾರು ಪ್ರಶ್ನೆಗಳ ಮೂಲಕ ಗ್ರಿಲ್‌ ಮಾಡಿದ್ದು, ಅದರಲ್ಲಿ ಮುಖ್ಯವಾದುದು ಅವರು ಅಶ್ಲೀಲ ವಿಡಿಯೋಗಳನ್ನು (obscene video) ಚಿತ್ರೀಕರಿಸಿಕೊಂಡ ಮೊಬೈಲ್‌ ಎಲ್ಲಿದೆ ಎಂಬುದಾಗಿತ್ತು.

ಈ ಸಂದರ್ಭದಲ್ಲಿ ಪ್ರಜ್ವಲ್‌ ರೇವಣ್ಣ ಅಚ್ಚರಿಯ ಹೇಳಿಕೆಯೊಂದನ್ನು ನೀಡಿದ್ದು, ತಮ್ಮ ಮೊಬೈಲ್‌ ಕಳೆದುಹೋಗಿದೆ ಎಂದಿದ್ದಾರೆ. ತಮ್ಮ ಮೊಬೈಲ್‌ ಒಂದು ವರ್ಷದ ಹಿಂದೆಯೇ ಕಳೆದುಹೋಗಿದ್ದು, ಆ ಕುರಿತು ಹೊಳೆನರಸೀಪುರ ಠಾಣೆಯಲ್ಲಿ ಮೊಬೈಲ್ ಕಳ್ಳತನದ ಬಗ್ಗೆ ದೂರು ನೀಡಿರುವುದಾಗಿಯೂ ಹೇಳಿದ್ದಾರೆ.

ಪ್ರಜ್ವಲ್‌ ಅವರ ವಿಚಾರಣೆ ಮಾಡಿ 161 ಹೇಳಿಕೆಯನ್ನು ಎಸ್‌ಐಟಿ ದಾಖಲಿಸಿದೆ. ಅದರಲ್ಲಿ ಮೊಬೈಲ್‌ ಕುರಿತು ದಾಖಲಿಸಿದೆ. ನೀವು ಹೇಳುತ್ತಿರುವ ಮೊಬೈಲ್ ನನ್ನ ಬಳಿ ಇಲ್ಲ. ಕಳೆದ ವರ್ಷವೇ ಫೋನ್ ಕಳೆದು ಹೋಗಿದ್ದು, ಆ ಬಗ್ಗೆ ಹೊಳೆನರಸೀಪುರ ಠಾಣೆಯಲ್ಲಿ ದೂರು ಕೂಡ ನೀಡಿದ್ದೇನೆ ಎಂದು ಪ್ರಜ್ವಲ್‌ ಹೇಳಿದ್ದಾರೆ. ಈ ಹೇಳಿಕೆ ಸತ್ಯಾಸತ್ಯತೆಯನ್ನು ಎಸ್‌ಐಟಿ ಪರಿಶೀಲಿಸಲಿದೆ.

ನೀವು ತೋರಿಸಿರುವ ವಿಡಿಯೋಗಳಲ್ಲಿ ಇರುವುದು ನಾನಲ್ಲ. ಅವರೆಲ್ಲ ನನಗೆ ಪರಿಚಯ ಅಷ್ಟೇ. ನಾನು ಯಾರನ್ನೂ ಅತ್ಯಾಚಾರ ಮಾಡಿಲ್ಲ. ಅತ್ಯಾಚಾರ ಆರೋಪಗಳಿಗೂ ನನಗೂ ಯಾವ ಸಂಬಂಧವೂ ಇಲ್ಲ. ವಿಡಿಯೋಗಳ ಬಗ್ಗೆ ನಂಗಷ್ಟು ಗೊತ್ತಿಲ್ಲ ಎಂದು ಪ್ರಜ್ವಲ್‌ ಹೇಳಿದ್ದಾರೆ. ವೈರಲ್ ಆಗಿರುವ ವಿಡಿಯೋಗಳನ್ನು ತೋರಿಸಿ ಪ್ರಶ್ನಿಸಿದಾಗ ಈ ಉತ್ತರ ದೊರೆತಿದೆ. ತನ್ನ ಮೇಲಿರುವ ಎಲ್ಲ ಆರೋಪಗಳನ್ನು ಪ್ರಜ್ವಲ್‌ ತಳ್ಳಿ ಹಾಕಿದ್ದಾರೆ.

ಅಶ್ಲೀಲ ವಿಡಿಯೋಗಳನ್ನು ಚಿತ್ರೀಕರಿಸಿಕೊಂಡಿರುವ ಮೊಬೈಲ್‌ ಪ್ರಜ್ವಲ್‌ ವಿರುದ್ಧದ ಪ್ರಕರಣದಲ್ಲಿ ಪ್ರಬಲವಾದ ಸಾಕ್ಷ್ಯವಾಗಿದೆ. ಈ ಮೊಬೈಲ್‌ ಸಿಕ್ಕಿದರೆ, ಒಂದು ವೇಳೆ ವಿಡಿಯೋಗಳನ್ನು ಅಳಿಸಿದ್ದರೂ ಅದರಿಂದ ರಿಟ್ರೀವ್‌ ಮಾಡಬಹುದು. ಆದರೆ ಮೊಬೈಲ್‌ ಸಂಪೂರ್ಣ ನಾಶವಾಗಿದ್ದರೆ, ಯಾವುದೇ ಮೂಲ ರೆಕಾರ್ಡ್‌ಗಳು ಸಿಗಲಾರದು. ಅದರಿಂದ ಫಾರ್‌ವರ್ಡ್‌ ಆಗಿರುವ ವಿಡಿಯೋಗಳು ಸೆಕೆಂಡರಿ ಸಾಕ್ಷ್ಯಗಳೆನಿಸಿಕೊಳ್ಳುತ್ತವೆ. ಹೀಗಾಗಿ ಮೊಬೈಲ್‌ ಪಡೆಯಲು ಎಸ್‌ಐಟಿ ಪ್ರಯತ್ನ ನಡೆಸಬೇಕಿದೆ.

6 ದಿನಗಳ ಕಾಲ ಪೊಲೀಸ್‌ ಕಸ್ಟಡಿಗೆ ಪ್ರಜ್ವಲ್

ಹಾಸನ ಸಂಸದ ಪ್ರಜ್ವಲ್​ ರೇವಣ್ಣ (Prajwal Revanna back in India ) ಅವರನ್ನು 6 ದಿನಗಳ ಕಾಲ ಎಸ್​ಐಟಿ ಪೊಲೀಸರ ಕಸ್ಟಡಿಗೆ ನೀಡಲಾಗಿದೆ. ಎಸಿಎಮ್​ಎಮ್​​ ನ್ಯಾಯಾಲಯದ ನ್ಯಾಯಧೀಶ ಎನ್​. ಶಿವಕುಮಾರ್​​ ಈ ಆದೇಶ ಹೊರಡಿಸಿದ್ದಾರೆ. ಗುರುವಾರ ರಾತ್ರಿ ಬೆಂಗಳೂರು ಅಂತಾರಾಷ್ಟ್ರೀಯ ವಿಮಾನ ನಿಲ್ದಾಣದಿಂದ ಪ್ರಜ್ವಲ್​ ರೇವಣ್ಣ ಅವರನ್ನು ಬಂಧಿಸಿದ್ದ ಎಸ್​ಐಟಿ ಪೊಲೀಸರು ಶುಕ್ರವಾರ ನ್ಯಾಯಾಲಯದ ಮುಂದೆ ಹಾಜರುಪಡಿಸಿದ್ದರು. ಗಂಭೀರ ಆರೋಪಗಳನ್ನು ಹೊತ್ತಿರುವ ಅವರ ತನಿಖೆಗಾಗಿ ಎಸ್​ಐಟಿ ತನ್ನ ಕಸ್ಟಡಿಗೆ ನೀಡುವಂತೆ ನ್ಯಾಯಾಲಯಕ್ಕೆ ಮನವಿ ಮಾಡಿತ್ತು. ಅದನ್ನು ನ್ಯಾಯಾಧೀಶರು ಪುರಸ್ಕರಿಸಿದ್ದಾರೆ.

ಬೆಂಗಳೂರಿನ 42ನೇ ಎಸಿಎಮ್​ಸಿ ನ್ಯಾಯಾಲಯ ಈ ಆದೇಶ ಹೊರಡಿಸಿದ್ದು ಪ್ರಜ್ವಲ್ ಅವರಿಗೆ ಯಾವುದೇ ಕಿರಕುಗಳ ನೀಡಬಾರದು ಎಂದು ಎಸ್​ಐಟಿ ಅಧಿಕಾರಿಗಳಿಗೆ ಸೂಚನೆ ನೀಡಿದ್ದಾರೆ. ಇದೇ ವೇಳೆ ವೈದ್ಯಕೀಯ ಪರೀಕ್ಷೆ ಸೇರಿದಂತೆ ತನಿಖೆಗೆ ಎಲ್ಲ ರೀತಿಯಲ್ಲೂ ಸಹಕಾರ ನೀಡುವಂತೆ ಪ್ರಜ್ವಲ್ ರೇವಣ್ಣ ಅವರಿಗೂ ಸೂಚನೆ ನೀಡಿದ್ದಾರೆ. ಎಸ್ಐಟಿ ಅಧಿಕಾರಿಗಳು ಶುಕ್ರವಾರ ಸೇರಿದಂತೆ ಒಟ್ಟು 15 ದಿನಗಳ ಕಾಲ ತಮ್ಮ ಕಸ್ಟಡಿಗೆ ನೀಡುವಂತೆ ಕೋರಿದ್ದರು. ಆದರೆ, ಪ್ರಜ್ವಲ್ ಪರ ವಕೀಲರು 1 ದಿನ ಸಾಕು ಎಂದು ವಾದಿಸಿದ್ದರು. ಆದರೆ, ನ್ಯಾಯಾಧೀಶರು 6 ದಿನಗಳನ್ನು ಮಾನ್ಯ ಮಾಡಿದ್ದಾರೆ.

ಗುರುವಾರ ರಾತ್ರಿ ಪ್ರಜ್ವಲ್ ರೇವಣ್ಣ ಅವರನ್ನು ಬಂಧಿಸಿದ್ದ ಪೊಲೀಸರು ಬೆಳಗ್ಗೆ ತನಕ ಎಸ್​ಐಟಿ ಕಚೇರಿಯಲ್ಲೇ ವಿಶ್ರಾಂತಿ ಪಡೆಯಲು ಅನುಕೂಲ ಮಾಡಿಕೊಟ್ಟಿದ್ದರು. ಬೆಳಗ್ಗೆ ಅವರ ವೈದ್ಯಕೀಯ ಪರೀಕ್ಷೆ ನಡೆಸಿ ಬಳಿಕ ಅವರಿಂದ ಅಗತ್ಯ ದಾಖಲೆಗಳಿಗೆ ಸಹಿ ಮಾಡಿಕೊಂಡರು. ಆ ಬಳಿಕ ಅವರನ್ನು ನ್ಯಾಯಾಲಯಕ್ಕೆ ಹಾಜರುಪಡಿಸಿದ್ದರು.‌

ಇದನ್ನೂ ಓದಿ: Prajwal Revanna Case: ಭವಾನಿ ರೇವಣ್ಣ ಕಾರು ಚಾಲಕನನ್ನು ವಶಕ್ಕೆ ಪಡೆದ ಎಸ್‌ಐಟಿ

Continue Reading

ಪ್ರಮುಖ ಸುದ್ದಿ

Bhavani Revanna: `ಮನೆಗೆ ಬನ್ನಿʼ ಎಂದ ಭವಾನಿ ರೇವಣ್ಣ ಮನೆಯಲ್ಲಿಲ್ಲ! ಹಾಗಾದ್ರೆ ಎಲ್ಲಿ?

Bhavani Revanna: ಇಂದು ಹೊಳೆನರಸೀಪುರದ ಅವರ ಮನೆಗೆ ತನಿಖೆಗೆ ಬರುವುದಾಗಿ ಎಸ್‌ಐಟಿ ನೋಟೀಸ್‌ (SIT Notice) ನೀಡಿತ್ತು. ಆದರೆ ಭವಾನಿ ರೇವಣ್ಣ ತಮ್ಮ ನಿವಾಸದಲ್ಲಿ ಇಲ್ಲ ಎಂದು ತಿಳಿದುಬಂದಿರುವ ಕಾರಣ ಅವರು ಎಲ್ಲಿದ್ದಾರೆ ಎಂದು SIT ಅಧಿಕಾರಿಗಳು ಮಾಹಿತಿ ಕಲೆ ಹಾಕುತ್ತಿದ್ದಾರೆ.

VISTARANEWS.COM


on

bhavani revanna case
Koo

ಹಾಸನ: ನಿನ್ನೆ ಭವಾನಿ ರೇವಣ್ಣ (Bhavani revanna) ಅವರ ಜಾಮೀನು ಅರ್ಜಿ (bail plea) ರದ್ದಾಗಿದ್ದು, ಇಂದು ಅವರ ಬಂಧನ (Arrest) ಸಾಧ್ಯತೆ ಇದೆ. ಕೆ.ಆರ್‌ ನಗರದ ಸಂತ್ರಸ್ತ ಮಹಿಳೆ ಕಿಡ್ನಾಪ್ ಕೇಸಿನಲ್ಲಿ (kidnap case) ಎಸ್‌ಐಟಿಗೆ (SIT) ಭವಾನಿ ರೇವಣ್ಣ ಬೇಕಾಗಿದ್ದು, ಇಂದು ಹೊಳೆನರಸೀಪುರದ ಅವರ ಮನೆಗೆ ತನಿಖೆಗೆ ಬರುವುದಾಗಿ ಎಸ್‌ಐಟಿ ನೋಟೀಸ್‌ (SIT Notice) ನೀಡಿತ್ತು. ಆದರೆ ಭವಾನಿ ಹೊಳೆನರಸೀಪುರದ ಮನೆಯಲ್ಲೂ, ಬೆಂಗಳೂರಿನ ಮನೆಯಲ್ಲೂ ಕಾಣಿಸಿಕೊಂಡಿಲ್ಲ.

ಭವಾನಿ ರೇವಣ್ಣ ನಿರೀಕ್ಷಣಾ ಜಾಮೀನು ಅರ್ಜಿ ನಿನ್ನೆ ರದ್ದಾಗಿರುವ ಹಿನ್ನೆಲೆಯಲ್ಲಿ, ಯಾವುದೇ ಕ್ಷಣದಲ್ಲಿ ಭವಾನಿ ರೇವಣ್ಣ ಬಂಧನ ಸಾಧ್ಯತೆ ಇದ್ದು, ಅದಕ್ಕಾಗಿ ಎಸ್ಐಟಿ ಬಲೆ ಬೀಸಿದೆ. ಇಂದು ಭವಾನಿ ರೇವಣ್ಣ ವಿಚಾರಣೆಗಾಗಿ ಹೊಳೆನರಸೀಪುರಕ್ಕೆ ಎಸ್ಐಟಿ ಟೀಂ ಆಗಮಿಸಲಿದೆ. ಕಿಡ್ನಾಪ್ ಆರೋಪ ಪ್ರಕರಣದಲ್ಲಿ ತಮ್ಮ ತನಿಖೆ ಅವಶ್ಯಕತೆ ಇದ್ದು, ತನಿಖೆಗೆ ಸಹಕರಿಸಬೇಕಾಗಿ ಎಸ್‌ಐಟಿ ಹೇಳಿತ್ತು. ತನಿಖೆಗೆ ಹೊಳೆನರಸೀಪುರದ ನಿವಾಸದಲ್ಲಿ ತಾವು ಲಭ್ಯವಿರುವುದಾಗಿ ಮೇ 15ರಂದು ಎಸ್ಐಟಿಗೆ ಭವಾನಿ ಲಿಖಿತ ಪತ್ರ ನೀಡಿದ್ದರು.

ಭವಾನಿ ಅವರ ಪತ್ರವನ್ನೇ ಉಲ್ಲೇಖಿಸಿ ನಿನ್ನೆ ಎಸ್‌ಐಟಿ ನೋಟೀಸ್ ನೀಡಿತ್ತು. ಪ್ರಕರಣ ಸಂಬಂಧ ತಮ್ಮ ವಿಚಾರಣೆ ಅಗತ್ಯ ಇದೆ, ಹಾಗಾಗಿ ಜೂನ್ 1ರಂದು ವಿಚಾರಣೆಗೆ ಬರುವುದಾಗಿ ತಿಳಿಸಿತ್ತು. ಜೂನ್ 1ರ ಶನಿವಾರ ಮಹಿಳಾ ಅಧಿಕಾರಿ ಜೊತೆ ಹೊಳೆನರಸೀಪುರದ ಚನ್ನಾಂಬಿಕ ನಿವಾಸಕ್ಕೆ ತಾವು ಬರುವುದಾಗಿ ಎಸ್‌ಐಟಿ ಮುಖ್ಯಸ್ಥ ಹೇಮಂತ್‌ ಕುಮಾರ್‌ ತಿಳಿಸಿದ್ದರು. ಬೆಳಿಗ್ಗೆ 10ರಿಂದ ಸಂಜೆ 5 ಗಂಟೆ ನಡುವೆ ನೀವು ತಿಳಿಸಿದ ವಿಳಾಸಕ್ಕೆ ಬರುತ್ತೇವೆ. ಈ ಸಮಯದಲ್ಲಿ ನೀವು ಖುದ್ದು ಹಾಜರಿರಬೇಕು ಎಂದು ಸೂಚಿಸಿದ್ದರು. ಆದರೆ ಭವಾನಿ ರೇವಣ್ಣ ತಮ್ಮ ನಿವಾಸದಲ್ಲಿ ಇಲ್ಲ ಎಂದು ತಿಳಿದುಬಂದಿರುವ ಕಾರಣ ಅವರು ಎಲ್ಲಿದ್ದಾರೆ ಎಂದು SIT ಅಧಿಕಾರಿಗಳು ಮಾಹಿತಿ ಕಲೆ ಹಾಕುತ್ತಿದ್ದಾರೆ.

ಭವಾನಿ ರೇವಣ್ಣ ಅವರಿಗೆ ಕ್ಯಾನ್ಸರ್‌ (Cancer) ಇದೆ. ಚಿಕಿತ್ಸೆ ಪಡೆಯಲು ನಿರೀಕ್ಷಣಾ ಜಾಮೀನು ನೀಡಬೇಕೆಂದು ಭವಾನಿ ಪರ ವಕೀಲರು ಕೋರ್ಟ್‌ನಲ್ಲಿ (Bengaluru Court) ವಾದ ಮಾಡಿದ್ದರು. ಲೈಂಗಿಕ ದೌರ್ಜನ್ಯದ ಸಂತ್ರಸ್ತೆಯನ್ನು ಕಿಡ್ನಾಪ್‌ ಮಾಡಿದ ಆರೋಪ ಎದುರಿಸುತ್ತಿರುವ ಭವಾನಿ ರೇವಣ್ಣ ವಿರುದ್ಧ ದೂರು ದಾಖಲಾಗಿತ್ತು. ಬಂಧನ ಭೀತಿಯಿಂದ ಕೋರ್ಟ್‌ನಲ್ಲಿ ನಿರೀಕ್ಷಣಾ ಜಾಮೀನು ಅರ್ಜಿ ಸಲ್ಲಿಸಿದ್ದರು. ವಾದ-ಪ್ರತಿವಾದ ಆಲಿಸಿದ ಕೋರ್ಟ್, ಅರ್ಜಿಯನ್ನು ವಜಾಗೊಳಿಸಿದೆ. ಪ್ರಕರಣದಲ್ಲಿ ದಾಖಲಾಗಿದ್ದ IPC ಸೆಕ್ಷನ್ 120ಬಿ ಕ್ರಿಮಿನಲ್ ಕಾನ್ಸ್‌ಪಿರೆಸಿಯನ್ನು ಗಂಭೀರವಾಗಿ ಪರಿಗಣಿಸಿರುವ ಕೊರ್ಟ್, ನಿರೀಕ್ಷಣಾ ಜಾಮೀನು ಅರ್ಜಿ ವಜಾಗೊಳಿಸಿದೆ.

ನಿನ್ನೆ ಅವರ ಪುತ್ರ, ಪ್ರಕರಣದ ಪ್ರಧಾನ ಆರೋಪಿ ಪ್ರಜ್ವಲ್‌ ರೇವಣ್ಣ (Prajwal Revanna Case) ಅವರನ್ನು ಬಂಧಿಸಿ ಕೋರ್ಟ್‌ ಮುಂದೆ ಹಾಜರುಪಡಿಸಲಾಗಿದ್ದು, ಆರು ದಿನಗಳ ಪೊಲೀಸ್‌ ಕಸ್ಟಡಿಗೆ ಕೋರ್ಟ್‌ ನೀಡಿದೆ. ಪ್ರಜ್ವಲ್‌ ಅವರ ವೈದ್ಯಕೀಯ ತಪಾಸಣೆ ಕೂಡ ನಡೆಸಲಾಗಿದೆ. ಪ್ರಜ್ವಲ್‌ ಅವರನ್ನು ಕರೆದೊಯ್ದು ಸ್ಥಳ ಮಹಜರು ನಡೆಸಲು ಎಸ್‌ಐಟಿ ಮುಂದಾಗಿದೆ.

ಇದನ್ನೂ ಓದಿ: Prajwal Revanna Case: ಭವಾನಿ ರೇವಣ್ಣ ಕಾರು ಚಾಲಕನನ್ನು ವಶಕ್ಕೆ ಪಡೆದ ಎಸ್‌ಐಟಿ

Continue Reading

ಬೆಂಗಳೂರು

KCET Result 2024 : ಜೂನ್‌ ಮೊದಲ ವಾರ ಸಿಇಟಿ ಪರೀಕ್ಷೆ ಫಲಿತಾಂಶ ಖಚಿತ!

KCET Result 2024 : ಇಂಜಿನಿಯರಿಂಗ್‌ (Engineering) ಸೇರಿದಂತೆ ವೃತ್ತಿಪರ ಕೋರ್ಸ್‌ಗಳ ಪ್ರವೇಶಕ್ಕಾಗಿ ನಡೆದಿದ್ದ ಕೆ-ಸಿಇಟಿ (Karnataka CET 2024) ಪರೀಕ್ಷೆ ಫಲಿತಾಂಶ ಶೀಘ್ರದಲ್ಲೇ ಪ್ರಕಟಗೊಳ್ಳಲಿದೆ. ಬಹುತೇಕ ಜೂನ್‌ ಮೊದಲ ವಾರವೇ ಪರೀಕ್ಷೆ ಫಲಿತಾಂಶವು ಪ್ರಕಟಗೊಳ್ಳಲಿದೆ ಎಂದು ಅಧಿಕಾರಿಗಳು ಮಾಹಿತಿ ನೀಡಿದ್ದಾರೆ.

VISTARANEWS.COM


on

By

KCET Result 2024
Koo

ಬೆಂಗಳೂರು: 2024ನೇ ಸಾಲಿನ ಇಂಜಿನಿಯರಿಂಗ್, ಆರ್ಕಿಟೆಕ್ಚರ್, ಕೃಷಿ ವಿಜ್ಞಾನ, ವೆಟರಿನರಿ, ಬಿ-ಫಾರ್ಮ್‌, ಇತರ ವೃತ್ತಿಪರ ಕೋರ್ಸ್‌ಗಳ ಪ್ರವೇಶಾತಿಗೆ ನಡೆಸಿದ ಕರ್ನಾಟಕ ಸಾಮಾನ್ಯ ಪ್ರವೇಶ ಪರೀಕ್ಷೆಯ (CET Result) ಫಲಿತಾಂಶ ಶೀಘ್ರದಲ್ಲೇ ಪ್ರಕಟಗೊಳ್ಳಲಿದೆ. ಕರ್ನಾಟಕ ಪರೀಕ್ಷಾ ಪ್ರಾಧಿಕಾರವು (KEA) ಸಿಇಟಿ ಪರೀಕ್ಷೆಯನ್ನು (KCET Exam) ಏಪ್ರಿಲ್ 18, 19 ಹಾಗೂ 20ರಂದು ನಡೆಸಿತ್ತು. ಇದರಲ್ಲಿ ಸುಮಾರು 3.28 ಲಕ್ಷ ಅಭ್ಯರ್ಥಿಗಳು ಪರೀಕ್ಷೆಗೆ ನೊಂದಾಯಿಸಿ ಕೊಂಡಿದ್ದರು. ಇದೀಗ ಇವರೆಲ್ಲರ ಭವಿಷ್ಯವು ಜೂನ್‌ ಮೊದಲ ವಾರದಲ್ಲೇ (KCET Result 2024) ನಿರ್ಧಾರವಾಗಲಿದೆ.

ಸಿಇಟಿ ಫಲಿತಾಂಶವನ್ನು ಲೋಕಸಭಾ ಚುನಾವಣೆಯ ರಿಸಲ್ಟ್‌ ಬಳಿಕವೇ ಘೋಷಣೆಯಾಗಲಿದೆ ಎಂದು ಹೇಳಲಾಗುತ್ತಿತ್ತು. ಆದರೆ, ಈಗ ಕರ್ನಾಟಕ ಪರೀಕ್ಷಾ ಪ್ರಾಧಿಕಾರದ ಕಾರ್ಯನಿರ್ವಾಹಕ ನಿರ್ದೇಶಕ ಪ್ರಸನ್ನ, ದ್ವಿತೀಯ ಪಿಯುಸಿ 2ರ ಪರೀಕ್ಷೆ ಫಲಿತಾಂಶ ನಂತರವೇ ಸಿಇಟಿ ಫಲಿತಾಂಶವನ್ನು ಪ್ರಕಟ ಮಾಡಲಾಗುವುದು ಎಂದು ಹೇಳಿದ್ದರು. ಕಳೆದ ಮೇ 21ರಂದು ದ್ವಿತೀಯ ಪಿಯುಸಿ ಪರೀಕ್ಷೆ-2ರ ಫಲಿತಾಂಶವು ಪ್ರಕಟಗೊಂಡಿದೆ. ಹೀಗಾಗಿ ವಿದ್ಯಾರ್ಥಿಗಳ ಚಿತ್ತ ಸಿಇಟಿ ಫಲಿತಾಂಶದತ್ತ ನೆಟ್ಟಿದೆ.

ಪಿಯುಸಿ ಪರೀಕ್ಷೆಯ ಯಾವ ಅಂಕ ಪರಿಗಣನೆ?

ಪ್ರಸಕ್ತ ಸಾಲಿನಲ್ಲಿ ದ್ವಿತೀಯ ಪಿಯುಸಿಗೆ ಮೂರು ಪರೀಕ್ಷೆಗಳನ್ನು ನಡೆಸಲಾಗುತ್ತಿದ್ದು, ಮೊದಲ ಎರಡು ಪರೀಕ್ಷೆಗಳ ಪೈಕಿ ಯಾವುದರಲ್ಲಿ ಹೆಚ್ಚು ಅಂಕ ಬಂದಿದೆಯೊ ಅವುಗಳನ್ನೇ ಸಿಇಟಿ ರ‍್ಯಾಂಕ್‌ಗೆ ಪರಿಗಣನೆ ಮಾಡಲಾಗುತ್ತದೆ.

ರಿಸಲ್ಟ್‌ ಚೆಕ್‌ ಮಾಡುವ ವಿಧಾನ ಹೇಗೆ?

ರಿಸಲ್ಟ್‌ ಪ್ರಕಟವಾದ ಬಳಿಕ ಚೆಕ್‌ ಮಾಡುವ ವಿಧಾನದ ಹಂತ ಹಂತದ ಮಾಹಿತಿ ಇಲ್ಲಿದೆ. ಕರ್ನಾಟಕ ಎಕ್ಸಾಮಿನೇಷನ್‌ ಅಥಾರಿಟಿ ಅಫೀಶಿಯಲ್ ವೆಬ್‌ಸೈಟ್‌ https://cetonline.karnataka.gov.in/kea/ಗೆ ಭೇಟಿ ನೀಡಿ.

ಓಪನ್‌ ಆದ ಪುಟದ ಮೇಲ್ಭಾಗದಲ್ಲಿರುವ ʼಪ್ರವೇಶʼ ಆಯ್ಕೆಯನ್ನು ಕ್ಲಿಕ್‌ ಮಾಡಿ ಬಳಿಕ ʼಯುಜಿಸಿಇಟಿ 2024′ ಆಪ್ಶನ್‌ ಸೆಲೆಕ್ಟ್‌ ಮಾಡಿ.

ಇತ್ತೀಚಿನ ಪ್ರಕಟಣೆಗಳು ಎಂದಿರುವ ಕೆಳಗಡೆ ‘ಯುಜಿಸಿಇಟಿ 2024’ ಫಲಿತಾಂಶದ ಲಿಂಕ್ ನೀಡಲಾಗಿರುತ್ತದೆ. ಅದನ್ನು ಕ್ಲಿಕ್ ಮಾಡಿ.

ಈಗ ತೆರೆದುಕೊಳ್ಳುವ ಹೊಸ ಪುಟದಲ್ಲಿ ಅಭ್ಯರ್ಥಿಗಳು ತಮ್ಮ ರಿಜಿಸ್ಟರ್ ನಂಬರ್ ಮತ್ತು ಜನ್ಮ ದಿನಾಂಕ ಮಾಹಿತಿ ನೀಡಿ, ‘Submit’ ಬಟನ್‌ ಕ್ಲಿಕ್‌ ಮಾಡಿದರೆ ಫಲಿತಾಂಶ ಕಾಣಿಸುತ್ತದೆ. ಇದರ ಹೊರತಾಗಿಯೂ ವಿದ್ಯಾರ್ಥಿಗಳ ಫೋನ್‌ ನಂಬರ್‌ಗೆ ಫಲಿತಾಂಶದ ಮಸೇಜ್‌ ಬರಲಿದೆ.

ಇದನ್ನೂ ಓದಿ: Liquor Ban : ಡ್ರೈ ಡೇ ಎಫೆಕ್ಟ್‌; ನಾಳೆ ಸಂಜೆಯಿಂದಲೇ ಮದ್ಯ ಮಾರಾಟ ಬಂದ್‌

ಔಟ್‌ ಆಫ್‌ ಸಿಲಬಸ್‌ ಪ್ರಶ್ನೆಗಳು

ರಾಜ್ಯದಲ್ಲಿ ಕರ್ನಾಟಕ ಪರೀಕ್ಷಾ ಪ್ರಾಧಿಕಾರದಿಂದ ಪ್ರತಿ ವರ್ಷ ವೃತ್ತಿಪರ ಕೋಸ್‌ಗಳಿಗೆ ಸಾಮಾನ್ಯ ಪ್ರವೇಶ ಪರೀಕ್ಷೆಯನ್ನು ನಡೆಸಲಾಗುತ್ತದೆ. ಆದರೆ, ಈ ಬಾರಿಯ ಸಿಇಟಿ ಪರೀಕ್ಷೆ ಗೊಂದಲದ ಗೂಡಾಗಿತ್ತು. ಪರೀಕ್ಷೆಯಲ್ಲಿ 4 ವಿಷಯಗಳಲ್ಲಿ ಸುಮಾರು 50ಕ್ಕೂ ಹೆಚ್ಚು ಔಟ್‌ ಆಫ್‌ ಸಿಲಬಸ್‌ (Out of Syllabus) ಪ್ರಶ್ನೆಗಳನ್ನು ಕೇಳಲಾಗಿತ್ತು. ರಸಾಯನ ಶಾಸ್ತ್ರದಲ್ಲಿ 6, ಭೌತಶಾಸ್ತ್ರ ವಿಷಯದಲ್ಲಿ 5 ಪ್ರಶ್ನೆಗಳು, ಜೀವಶಾಸ್ತ್ರ ಪರೀಕ್ಷೆಯಲ್ಲಿ 11 ಪ್ರಶ್ನೆಗಳು, ಗಣಿತದಲ್ಲಿ 9 ಪ್ರಶ್ನೆಗಳು ಪಠ್ಯಕ್ರಮದಿಂದ ಹೊರತಾಗಿದ್ದವು. ಇದಕ್ಕೆ ವ್ಯಾಪಕ ಆಕ್ರೋಶವೂ ವ್ಯಕ್ತವಾಗಿದ್ದವು. ಬಳಿಕ ಆ 50 ಪ್ರಶ್ನೆಗಳನ್ನು ಕೈಬಿಟ್ಟು ಉಳಿದ ಪ್ರಶ್ನೆಗಳ ಮೌಲ್ಯ ಮಾಪನ ಮಾಡಲಾಗಿತ್ತು.

ಸದ್ಯ ಸಿಇಟಿ ಪರೀಕ್ಷೆಯ ಉತ್ತರ ಪತ್ರಿಕೆಯನ್ನು ಕರ್ನಾಟಕ ಪರೀಕ್ಷಾ ಪ್ರಾಧಿಕಾರ ಮೌಲ್ಯಮಾಪನ ಮಾಡಿ ಸಿದ್ಧಪಡಿಸಿದೆ. ಇದರ ಜತೆಗೆ ಶೇ. 50ರಷ್ಟು ದ್ವಿತೀಯ ಪಿಯುಸಿ ಅಂಕ ಮತ್ತು ಬಿಎಸ್‌ಸಿ ಸೀಟು ಹಂಚಿಕೆಗಾಗಿ ಜಿಕೆವಿಕೆ ನಡೆಸುವ ಪ್ರಾಯೋಗಿಕ ಪರೀಕ್ಷೆ ಫಲಿತಾಂಶದ ಅಂಕ ಸೇರಿಸಬೇಕಾಗಿರುವುದರಿಂದ ಕೆಇಎ ಅದಕ್ಕಾಗಿ ಕಾಯುತ್ತಿದೆ.

ಈ ಸಂಗತಿಯ ಕುರಿತು ನಿಮ್ಮ ಅನಿಸಿಕೆ ಏನು? ಕಾಮೆಂಟ್ ಮೂಲಕ ತಿಳಿಸಿ

Continue Reading

ಮಳೆ

Karnataka Weather : ವಾರಾಂತ್ಯದಲ್ಲಿ ಈ ಜಿಲ್ಲೆಗಳಲ್ಲಿ ಮಿಸ್‌ಯಿಲ್ಲದೇ ಮಳೆ ಹಾಜರ್‌

Rain News : ವಾರಾಂತ್ಯದಲ್ಲಿ ಹಲವೆಡೆ ಗುಡುಗು, ಮಿಂಚು ಸಹಿತ ಮಳೆಯಾಗುವ ನಿರೀಕ್ಷೆ ಇದೆ. ಗಾಳಿ ವೇಗವು 30-40 ಕಿ.ಮೀ ವ್ಯಾಪ್ತಿಯಲ್ಲಿ ಬೀಸಲಿದೆ ಎಂದು ಹವಾಮಾನ ಇಲಾಖೆ ಮುನ್ಸೂಚನೆಯನ್ನು (Karnataka Weather Forecast) ನೀಡಿದೆ.

VISTARANEWS.COM


on

By

Karnataka Weather Forecast
ಸಾಂದರ್ಭಿಕ ಚಿತ್ರ
Koo

ಬೆಂಗಳೂರು: ಜೂನ್‌ 1ರಂದು ದಕ್ಷಿಣ ಒಳನಾಡು, ಮಲೆನಾಡು ಮತ್ತು ಕರಾವಳಿಯಲ್ಲಿ ಪ್ರತ್ಯೇಕವಾಗಿ ಹಗುರದಿಂದ ಸಾಧಾರಣ ಮಳೆಯಾಗುವ (Rain News) ಸಾಧ್ಯತೆ ಇದೆ. ರಾಜ್ಯದ ಪ್ರತ್ಯೇಕ ಸ್ಥಳಗಳಲ್ಲಿ ಗುಡುಗು, ಮಿಂಚು ಮತ್ತು 30-40 ಕಿ.ಮೀ ವ್ಯಾಪ್ತಿಯಲ್ಲಿ ಗಾಳಿ ಬೀಸುವ (Karnataka Weather Forecast) ಸಾಧ್ಯತೆಯಿದೆ.

ದಕ್ಷಿಣ ಒಳನಾಡಿನ ಮಂಡ್ಯ, ಮೈಸೂರು, ಬೆಂಗಳೂರು ನಗರ, ಬೆಂಗಳೂರು ಗ್ರಾಮಾಂತರ, ಕೋಲಾರ, ರಾಮನಗರ ಮತ್ತು ಚಾಮರಾಜನಗರದಲ್ಲಿ ಚದುರಿದಂತೆ ಹಗುರದಿಂದ ಸಾಧಾರಣ ಮಳೆಯಾಗುವ ಸಾಧ್ಯತೆಯಿದೆ. ಉಳಿದ‌ಂತೆ ಯಾವುದೇ ಮಳೆ ಮುನ್ಸೂಚನೆ ಇಲ್ಲ.

ಉತ್ತರ ಒಳನಾಡಿನ ಬೆಳಗಾವಿ, ಧಾರವಾಡ ಮತ್ತು ಹಾವೇರಿ ಜಿಲ್ಲೆಗಳಲ್ಲಿ ಪ್ರತ್ಯೇಕವಾಗಿ ಹಗುರವಾದ ಮಳೆಯಾಗಲಿದೆ. ಉಳಿದ ಭಾಗಗಳಲ್ಲಿ ಒಣ ಹವೆ ಮೇಲುಗೈ ಸಾಧಿಸಲಿದೆ.

ಇನ್ನೂ ಮಲೆನಾಡಿನ ಹಾಸನ, ಕೊಡಗು, ಚಿಕ್ಕಮಗಳೂರು, ಶಿವಮೊಗ್ಗದಲ್ಲಿ ಗುಡುಗು ಸಹಿತ ಸಾಧಾರಣ ಮಳೆಯಾಗಲಿದೆ. ಕರಾವಳಿಯ ದಕ್ಷಿಣ ಕನ್ನಡ, ಉಡುಪಿ, ಉತ್ತರ ಕನ್ನಡ ಭಾಗದಲ್ಲಿ ಸಾಧಾರಣ ಮಳೆಯ ನಿರೀಕ್ಷೆ ಇದೆ.

ಬೆಂಗಳೂರಿಗೂ ಮಳೆ ಮುನ್ಸೂಚನೆ

ಬೆಂಗಳೂರು ವ್ಯಾಪ್ತಿಯ ಪ್ರತ್ಯೇಕ ಕಡೆಗಳಲ್ಲಿ ಗುಡುಗು ಸಹಿತ ಮಳೆಯಾಗುವ ಸಾಧ್ಯತೆ ಇದೆ. ಗರಿಷ್ಠ ಉಷ್ಣಾಂಶ 32 ಡಿಗ್ರಿ ಸೆಲ್ಸಿಯಸ್ ಇರಲಿದ್ದು, ಕನಿಷ್ಠ ಉಷ್ಣಾಂಶ 22 ಡಿಗ್ರಿ ಸೆಲ್ಸಿಯಸ್ ಇರಲಿದೆ.

ಇದನ್ನೂ ಓದಿ: Exit Poll: ಈ ಹಿಂದೆ 5 ಬಾರಿ ಎಕ್ಸಿಟ್ ಪೋಲ್ ಭವಿಷ್ಯ ಉಲ್ಟಾ ಹೊಡೆದಿತ್ತು! ಯಾವಾಗ ನೆನಪಿದೆಯೆ?

ಹಣ್ಣು, ತರಕಾರಿಗಳ ಆರೋಗ್ಯಕರ ಸ್ಮೂದಿ ಎಂಬ ಟ್ರೆಂಡ್‌! ಒಳ್ಳೆಯದೇ, ಕೆಟ್ಟದ್ದೇ?

ಸದ್ಯದ ಯುವಜನರ ಆಹಾರದ ಟ್ರೆಂಡ್‌ ಎಂದರೆ ಅದು ಸ್ಮೂದಿ. ಬಹಳ ಸುಲಭವಾಗಿ ಮಾಡಬಲ್ಲ, ಹೊಟ್ಟೆ ತುಂಬಿಸಿಕೊಳ್ಳಬಹುದಾದ ಹಾಗೂ ಆರೋಗ್ಯಕ್ಕೆ ಒಳ್ಳೆಯದು ಎಂದು ಹೇಳಲಾದ ಟ್ರೆಂಡ್‌ ಆದ ಆಹಾರ ಕ್ರಮ. ಒಂದಿಷ್ಟು ಹಣ್ಣುಗಳನ್ನು ಸೇರಿಸಿ ಮಾಡುವ ಸ್ಮೂದಿ, ತರಕಾರಿಗಳನ್ನು ಸೇರಿಸಿ ಮಾಡುವ ಸ್ಮೂದಿ, ಬೀಜಗಳು ಒಣ ಹಣ್ಣುಗಳು, ವೇಗನ್‌ ಹಾಲು ಇತ್ಯಾದಿ ಇತ್ಯಾದಿ ಹಲವು ಬಗೆಯನ್ನು ಸೇರಿಸಿ ಮಾಡಬಹುದಾದ ಸ್ಮೂದಿಗಳು ಬಹುತೇಕರ ಜೀವನದಲ್ಲಿ ಇಂದು ಪ್ರತಿನಿತ್ಯದ ಆಹಾರ. ಹಲವು ಪೋಷಕಾಂಶಗಳನ್ನು ಒಳಗೊಂಡ, ಒಮ್ಮೆಲೇ ದೇಹಕ್ಕೆ ಬೇಕಾದ ಪೋಷಕಾಂಶಗಳನ್ನು ಸುಲಭವಾಗಿ ದೇಹಕ್ಕೆ ಸಿಗುವಂತೆ ಮಾಡಬಲ್ಲ, ಸುಲಭ ಸರಳವಾದ, ಫಟಾಫಟ್‌ ಮಾಡಬಹುದಾದ ಆಯ್ಕೆ ಇದು ಎಂಬುದರಲ್ಲಿ ಯಾವ ಸಂಶಯವೂ ಇಲ್ಲ. ಹಾಗಾದರೆ, ಈ ಸ್ಮೂದಿಗಳನ್ನು ಕುಡಿಯುವುದರಿಂದ, ದೇಹಕ್ಕೆ ಹಣ್ಣು, ತರಕಾರಿ, ಬೀಜಗಳನ್ನು ತಿಂದಷ್ಟೇ ಲಾಭಗಳು ದೊರೆಯುತ್ತವೆಯೇ ಎಂಬ ಬಗ್ಗೆ ನಿಮಗೆ ಪ್ರಶ್ನೆ ಉದ್ಭವಿಸಿದಲ್ಲಿ ಅದಕ್ಕೆ (Fruit and Veggie Smoothies) ಉತ್ತರ ಇಲ್ಲಿದೆ.

  • ನೀವು ಸ್ಮೂದಿಗಾಗಿ ಬಳಸುವ ಹಣ್ಣು ಹಂಪಲಾಗಿರಬಹುದು, ತರಕಾರಿಗಳಿರಬಹುದು, ಬೀಜ ಒಣಹಣ್ಣುಗಳಿರಬಹುದು, ಅವುಗಳನ್ನು ಹಾಗೆಯೇ ಜಗಿದು ತಿಂದರೆ ಆ ಜಗಿಯುವ ಪ್ರಕ್ರಿಯೆಯಲ್ಲಿ ಬಾಯಲ್ಲಿ ಲಾಲಾರಸವೂ ಅಂದರೆ ಜೊಲ್ಲೂ ಕೂಡಾ ಅದಕ್ಕೆ ಸೇರುತ್ತದೆ. ಈ ರಸ ಜೀರ್ಣಕ್ರಿಯೆಗೆ ಸಹಾಯ ಮಾಡುವ ರಸ. ಜೊತೆಗೆ ಇದು ಬಾಯಿಯನ್ನು ತೇವವಾಗಿ ಇಟ್ಟುಕೊಳ್ಳುವ ರಸವಾದ್ದರಿಂದ ಇದು ಬಾಯಿಯ ಮೂಲಕ ದೇಹಕ್ಕೆ ಇನ್‌ಫೆಕ್ಷನ್‌ ಹೋಗದಂತೆಯೂ ರಕ್ಷಿಸುತ್ತದೆ. ಸ್ಮೂದಿ ಮಾಡಿ ಕುಡಿಯುವುದರಿಂದ ದೇಹದ ಈ ನೈಸರ್ಗಿಕ ಕ್ರಿಯೆಯನ್ನೇ ನೀವು ದೂರ ಮಾಡಿ ಸುಲಭವಾಗಿ ಆಹಾರವನ್ನು ಹೊಟ್ಟೆಗೆ ಕಳುಹಿಸುತ್ತಿದ್ದೀರಿ ಎಂದಾಯಿತು. ಬಾಯಿಗೆ ಕೆಲಸವೇ ಇಲ್ಲ. ಜೀರ್ಣಕ್ರಿಗೆ ಸಹಾಯ ಆಡುವ ಅಂಶಗಳೂ ಅಲ್ಲಿ ಸೇರಲಿಲ್ಲ!
  • ಸ್ಮೂದಿಯನ್ನು ಕುಡಿಯುವುದರಿಂದ ಬಾಯಿಗೆ ಕೆಲಸವಿಲ್ಲದೆ ಅದು ನೇರವಾಗಿ ಹೊಟ್ಟೆಗೆ ಇಳಿಯುತ್ತದೆ. ಅಲ್ಲಿ ನಿಮ್ಮ ಜೊಲ್ಲುರಸ ಅಂದರೆ ಲಾಲಾರಸ ಈ ಆಹಾರದ ಜೊತೆಗೆ ಸರಿಯಾಗಿ ಸೇರಲಿಲ್ಲ ಅಂತಾಯಿತು. ಇದರಿಂದಾಗಿ ನಿಮ್ಮ ಜೀರ್ಣಕ್ರಿಯೆಯ ಸಾಮರ್ಥ್ಯ ನಿಧಾನವಾಗಿ ಕುಂಠಿತವಾಗುತ್ತಾ ಬರುತ್ತದೆ. ಕೇವಲ ಜೀರ್ಣಕ್ರಿಯೆಯಷ್ಟೇ ಅಲ್ಲ, ರೋಗನಿರೋಧಕ ಶಕ್ತಿಯೂ ಕುಂಠಿತವಾಗುತ್ತಾ ಬರುತ್ತದೆ. ಇಂತಹ ಬಗೆಯ ಆಹಾರಕ್ಕೇ ದೇಹ ಹೊಂದಿಕೊಂಡು, ಜೀರ್ಣ ಮಾಡುವ ಶಕ್ತಿ ಇಳಿಕೆಯಾಗುತ್ತದೆ.
  • ಸ್ಮೂದಿಯು ದ್ರವರೂಪದಲ್ಲಿರುವುದರಿಂದ ಸಹಜವಾಗಿಯೇ, ಸ್ಮೂದಿಯಲ್ಲಿರುವ ನೈಸರ್ಗಿಕ ಸಕ್ಕರೆ ಬಹುಬೇಗನೆ ರಕ್ತಕ್ಕೆ ಸೇರಿ ರಕ್ತದಲ್ಲಿರುವ ಸಕ್ಕರೆಯ ಪ್ರಮಾಣ ಇದ್ದಕ್ಕಿದ್ದಂತೆ ಏರಿಕೆಯಾಗುತ್ತದೆ. ಇದರಿಂದಾಗಿ ಸುಸ್ತಿನ ಅನುಭವ, ತಲೆಸುತ್ತಿನಂತ ಸಮಸ್ಯೆಗಳೂ ಮುಂದೆ ತಲೆದೋರಬಹುದು. ಹಣ್ಣುಗಳು, ಹಂಪಲುಗಳು ಹಾಗೂ ತರಕಾರಿಗಳಲ್ಲಿರುವ ನಾರಿನಂಶ ಸರಿಯಾಗಿ ಹೊಟ್ಟೆ ಸೇರದೆ, ವ್ಯರ್ಥವಾಗಬಹುದು. ಪೋಷಕಾಂಶವೂ ನಷ್ಟವಾಗಬಹುದು. ಇವೆಲ್ಲವನ್ನೂ ಜಗಿದು ತಿನ್ನುವಾಗ ಸಿಗಬಹುದಾದ ಆರೋಗ್ಯದ ಲಾಭಗಳೆಲ್ಲವೂ ಸ್ಮೂದಿಯ ಮೂಲಕ ಸಿಗದೇ ಹೋಗುವ ಸಾಧ್ಯತೆಗಳೇ ಹೆಚ್ಚು.
  • ಕೆಲವು ಮಂದಿಗೆ ದೇಹದಲ್ಲಿರುವ ಸಕ್ಕರೆಯ ಅಂಶದ ಏರಿಕೆಯಿಂದಾಗಿ ತಕ್ಷಣ ತಲೆಸುತ್ತು, ತಲೆನೋವು ಮತ್ತಿತರ ಸಮಸ್ಯೆಯೂ ಕಾಡಬಹುದು. ಆದರೆ, ಸ್ಮೂದಿಗೆ ಬಳಸಿದ ಹಣ್ಣು ಹಂಪಲು ಅಥವಾ ತರಕಾರಿ, ಒಣ ಹಣ್ಣು ಬೀಜಗಳನ್ನು ಹಾಗೆಯೇ ತಿನ್ನುವುದರಿಂದ ಈ ಪರಿಣಾಮಗಳು ಕಾಣಿಸಿಕೊಳ್ಳಲಾರದು. ಹಾಗಾಗಿ, ಸ್ಮೂದಿಗಿಂತ ಹಾಗೆಯೇ ತಿನ್ನುವುದೇ ಆರೋಗ್ಯಕ್ಕೆ ಹೆಚ್ಚು ಸೂಕ್ತ ಎಂಬುದನ್ನು ನೆನಪಿಡಿ.

ಈ ಸಂಗತಿಯ ಕುರಿತು ನಿಮ್ಮ ಅನಿಸಿಕೆ ಏನು? ಕಾಮೆಂಟ್ ಮೂಲಕ ತಿಳಿಸಿ

Continue Reading
Advertisement
T20 World Cup 2024
ಕ್ರಿಕೆಟ್3 mins ago

Team India: ವೆಸ್ಟ್​ ಇಂಡೀಸ್​ ಮೈದಾನ ಭಾರತದ ಪಾಲಿಗೆ ಅನ್ ಲಕ್ಕಿ; ಹಿಂದಿನ 2 ವಿಶ್ವಕಪ್ ಟೂರ್ನಿಯ​ ಹಿನ್ನೋಟ ಇಲ್ಲಿದೆ

Porsche Crash
ದೇಶ25 mins ago

Porsche Crash: ಕಾರು ಗುದ್ದಿ ಇಬ್ಬರನ್ನು ಸಾಯಿಸಿದ ಪ್ರಕರಣ; ಸಾಕ್ಷ್ಯ ತಿರುಚಿದ ಅಪ್ರಾಪ್ತನ ತಾಯಿಯ ಬಂಧನ

Physical Abuse
ಉಡುಪಿ30 mins ago

Physical Abuse : ವೈದ್ಯಾಧಿಕಾರಿ ಅಶ್ಲೀಲ ವರ್ತನೆ; ರಾತ್ರಿಯಾದರೆ ವಿಡಿಯೊ ಕಾಲ್‌ನಲ್ಲಿ ವೈದ್ಯೆಗೆ ಟಾರ್ಚರ್‌‌

Nandamuri Balakrishna touch actress anjali back
ಟಾಲಿವುಡ್55 mins ago

Nandamuri Balakrishna: ನಟಿ ಅಂಜಲಿಯ ಹಿಂಭಾಗ ಟಚ್ ಮಾಡಿದ್ರಾ ಬಾಲಯ್ಯ?

Shubman Gill
ಕ್ರೀಡೆ57 mins ago

Shubman Gill: ಕಿರುತೆರೆ​ ನಟಿಯೊಂದಿಗೆ ಶುಭಮನ್​ ಗಿಲ್ ಮದುವೆ?; ಸ್ವತಃ ಸ್ಪಷ್ಟನೆ ನೀಡಿದ ನಟಿ

Narendra Modi
Lok Sabha Election 20241 hour ago

Narendra Modi: ದಾಖಲೆಯ ಸಂಖ್ಯೆಯಲ್ಲಿ ಮತದಾನ ಮಾಡುವಂತೆ ಯುವ ಜನತೆಗೆ ಕರೆ ನೀಡಿದ ಪ್ರಧಾನಿ ಮೋದಿ

Murder Case in tumkur
ತುಮಕೂರು1 hour ago

Murder case : ಸ್ನೇಹಿತರೇ ದುಷ್ಮನ್‌ಗಳು; ಕಂಠಪೂರ್ತಿ ಕುಡಿಸಿ ಗೆಳೆಯನ ತಲೆ ಮೇಲೆ‌ ಕಲ್ಲು ಎತ್ತಿಹಾಕಿ ಕೊಲೆ

OpenAI
Lok Sabha Election 20242 hours ago

OpenAI: ಇಸ್ರೇಲ್‌ನ ಸಂಸ್ಥೆಯಿಂದ ಬಿಜೆಪಿ ವಿರುದ್ಧ ಪ್ರಚಾರ; ಶಾಕಿಂಗ್‌ ಮಾಹಿತಿ ಹಂಚಿಕೊಂಡ ಓಪನ್ಎಐ

Murder Case in Mysuru
ಕ್ರೈಂ2 hours ago

Murder case : ಜಸ್ಟ್‌ ಗುರಾಯಿಸಿದ್ದಕ್ಕೆ ಯುವಕನ ಬರ್ಬರ ಹತ್ಯೆ; ಸಾವಿನ ಕೊನೆ ಕ್ಷಣ ಸೆರೆ

Ambati Rayudu
ಕ್ರೀಡೆ2 hours ago

Ambati Rayudu: ಸ್ಟಾಂಡರ್ಡ್​ ಕಮ್ಮಿ ಮಾಡಿದರೆ ಉತ್ತಮ ಎಂದು ಕೊಹ್ಲಿಯ ಕಾಲೆಳೆದ ರಾಯುಡು

Sharmitha Gowda in bikini
ಕಿರುತೆರೆ8 months ago

Geetha Serial Kannada: ನಿದ್ದೆ ಕದ್ದ ಚೋರಿ! ನಟಿ `ಭಾನುಮತಿ’ ಹಾಟ್‌ ಪೋಟೊಗಳಿಗೆ ಫ್ಯಾನ್ಸ್ ಫುಲ್ ಫಿದಾ

Kannada Serials
ಕಿರುತೆರೆ8 months ago

Kannada Serials TRP: 2ನೇ ಸ್ಥಾನದಲ್ಲಿ 2 ಧಾರಾವಾಹಿಗಳು; ಟಿಆರ್‌ಪಿ ರೇಸ್‌ನಲ್ಲಿಲ್ಲ ಭಾಗ್ಯಲಕ್ಷ್ಮೀ!

Bigg Boss- Saregamapa 20 average TRP
ಕಿರುತೆರೆ8 months ago

Kannada Serials TRP: ಏಳನೇ ಸ್ಥಾನಕ್ಕೆ ʻಅಮೃತಧಾರೆʼ ಕುಸಿತ; ಬಿಗ್‌ ಬಾಸ್‌-ಸರಿಗಮಪ ಟಿಆರ್‌ಪಿ ಎಷ್ಟು?

galipata neetu
ಕಿರುತೆರೆ6 months ago

Kanyadana Serial: ಕಿರುತೆರೆಗೆ ಮತ್ತೆ ಎಂಟ್ರಿ ಕೊಟ್ಟ ʻಗಾಳಿಪಟʼ ಖ್ಯಾತಿಯ ʻನೀತುʼ!

Kannada Serials
ಕಿರುತೆರೆ8 months ago

Kannada Serials TRP: ನಾಲ್ಕನೇ ಸ್ಥಾನಕ್ಕೆ ಕುಸಿತ ಕಂಡ ʻಸೀತಾ ರಾಮʼ; ಟಿಆರ್‌ಪಿ ರೇಸ್‌ಗೆ ʻಭಾಗ್ಯಲಕ್ಷ್ಮಿʼ ಬ್ಯಾಕ್‌!

Kannada Serials
ಕಿರುತೆರೆ8 months ago

Kannada Serials TRP: ಟಿಆರ್‌ಪಿಯಲ್ಲಿ ʻಭಾಗ್ಯಲಕ್ಷ್ಮೀʼ ಹವಾ; ʻಪುಟ್ಟಕ್ಕನ ಮಕ್ಕಳುʼ ಧಾರಾವಾಹಿಗೆ ಸಂಕಷ್ಟ!

Bigg Boss' dominates TRP; Sita Rama fell to the sixth position
ಕಿರುತೆರೆ7 months ago

Kannada Serials TRP: ಟಿಆರ್‌ಪಿಯಲ್ಲಿ ʻಬಿಗ್ ಬಾಸ್ʼದೇ ಮೇಲುಗೈ; 6ನೇ ಸ್ಥಾನಕ್ಕೆ ಕುಸಿದ ʻಸೀತಾ ರಾಮʼ

geetha serial Dhanush gowda engagement
ಕಿರುತೆರೆ6 months ago

Dhanush Gowda: ಗೀತಾ ಧಾರಾವಾಹಿ ನಟನ ನಿಶ್ಚಿತಾರ್ಥ; ಭವ್ಯಾಳ ಕಮೆಂಟ್‌ ಬಾಕ್ಸ್‌ ಆಫ್‌!

varun
ಕಿರುತೆರೆ6 months ago

Brindavana Serial: ʼಬೃಂದಾವನʼ ಧಾರಾವಾಹಿಯಲ್ಲಿ ದೊಡ್ಡ ಟ್ವಿಸ್ಟ್‌; ಪ್ರಮುಖ ಪಾತ್ರಧಾರಿಯೇ ಬದಲು

Kannada Serials
ಕಿರುತೆರೆ9 months ago

Kannada Serials TRP: ಟಿಆರ್‌ಪಿಯಲ್ಲಿ ಏರಿಕೆ ಕಂಡ ʻಅಮೃತಧಾರೆʼ; ʻಗಟ್ಟಿಮೇಳʼಕ್ಕೆ ನಾಲ್ಕನೇ ಸ್ಥಾನ!

Assault Case in Shivamogga
ಕ್ರೈಂ2 days ago

Assault Case : ಶಿವಮೊಗ್ಗದಲ್ಲಿ ಮತ್ತೆ ಬಾಲ ಬಿಚ್ಚಿದ ಪುಂಡರು; ಗಾಂಜಾ ನಶೆಯಲ್ಲಿ ವಾಹನಗಳು ಪೀಸ್‌ ಪೀಸ್‌

Karnataka weather Forecast
ಮಳೆ4 days ago

Karnataka Weather : ಚಿಕ್ಕಮಗಳೂರಲ್ಲಿ ಭಾರಿ ಮಳೆ; ಯಾದಗಿರಿಯಲ್ಲಿ ಕರೆಂಟ್‌ ಕಟ್‌, ಜನರೇಟರ್‌ನಿಂದ ಮೊಬೈಲ್‌ಗಳಿಗೆ ಚಾರ್ಜಿಂಗ್‌!

tumkur murder
ತುಮಕೂರು4 days ago

Tumkur Murder : ಮಗುವಿನ ಮುಂದೆಯೇ ಹೆಂಡತಿಯ ಕತ್ತು, ದೇಹವನ್ನು ಕತ್ತರಿಸಿ ಬಿಸಾಡಿದ ದುಷ್ಟ

Karnataka Weather Forecast
ಮಳೆ5 days ago

Karnataka Weather : ಕಡಲತೀರದಲ್ಲಿ ಅಲೆಗಳ ಅಬ್ಬರ, ಪ್ರವಾಸಿಗರಿಗೆ ಕಟ್ಟೆಚ್ಚರ; ನಾಳೆಯೂ ಗಾಳಿ ಸಹಿತ ಮಳೆ ಅಬ್ಬರ

Karnataka Rain
ಮಳೆ6 days ago

Karnataka Rain : ಯಾದಗಿರಿಯಲ್ಲಿ ಬಿರುಗಾಳಿ ಸಹಿತ ಮಳೆ; ಸಿಡಿಲು ಬಡಿದು ಎಮ್ಮೆಗಳು ಸಾವು

Basavanagudi News
ಬೆಂಗಳೂರು6 days ago

Basavanagudi News : ಪೂಜಾ ಸಾಮಗ್ರಿಗೆ ಒನ್‌ ಟು ಡಬಲ್‌ ರೇಟ್‌; ದೊಡ್ಡ ಗಣಪತಿ ದೇಗುಲದಲ್ಲಿ ಕೈ ಕೈ ಮಿಲಾಯಿಸಿದ ಭಕ್ತರು-ವ್ಯಾಪಾರಿಗಳು

Karnataka Rain
ಮಳೆ7 days ago

Karnataka Rain : ಭಾರಿ ಮಳೆಗೆ ರಸ್ತೆ ಕಾಣದೆ ರಾಜಕಾಲುವೆಗೆ ಉರುಳಿದ ಆಟೋ; ಚಾಲಕ ಸ್ಥಳದಲ್ಲೇ ಸಾವು

dina bhavishya read your daily horoscope predictions for May 23 2024
ಭವಿಷ್ಯ1 week ago

Dina Bhavishya : 12 ರಾಶಿಯವರ ಇಂದಿನ ಭವಿಷ್ಯ ಹೇಗಿದೆ? ಯಾರಿಗೆ ಶುಭ, ಯಾರಿಗೆ ಅಶುಭ ಫಲ?

Karnataka Weather Forecast
ಮಳೆ1 week ago

Karnataka Weather : ಮುಂದುವರಿಯಲಿದೆ ವರುಣಾರ್ಭಟ; ಬೆಂಗಳೂರಲ್ಲೂ ಭಾರಿ ಮಳೆ ನಿರೀಕ್ಷೆ!

Karnataka Rain
ಮಳೆ2 weeks ago

Karnataka Rain : ಭಾರಿ ಮಳೆಗೆ ಕರೆಂಟ್‌ ಕಟ್‌, ಕತ್ತಲಲ್ಲೇ ರೋಗಿಗಳಿಗೆ ಟ್ರೀಟ್‌ಮೆಂಟ್‌; ಮರ ಬಿದ್ದರೂ ಪಾರಾದ ತಾಯಿ-ಮಗ

ಟ್ರೆಂಡಿಂಗ್‌