Shah Rukh Khan: ಪತ್ನಿ ಜತೆ ಸ್ಟೆಪ್‌ ಹಾಕಿದ ಶಾರುಖ್ ಖಾನ್‌: ವಿಡಿಯೊ ವೈರಲ್‌! - Vistara News

ಬಾಲಿವುಡ್

Shah Rukh Khan: ಪತ್ನಿ ಜತೆ ಸ್ಟೆಪ್‌ ಹಾಕಿದ ಶಾರುಖ್ ಖಾನ್‌: ವಿಡಿಯೊ ವೈರಲ್‌!

Shah Rukh Khan: ವೈರಲ್‌ ಆದ ಕ್ಲಿಪ್‌ನಲ್ಲಿ ಶಾರುಖ್ ಅವರು ಗೌರಿ ಮತ್ತು ಅಬ್ರಾಮ್ ಅವರೊಂದಿಗೆ ಪಾರ್ಟಿಗೆ ಆಗಮಿಸುತ್ತಿರುವುದು ಕಂಡುಬಂದಿದೆ. ಮಗನ ಕೈ ಹಿಡಿದ ಶಾರುಖ್ ಅವರನ್ನು ಆದಿತ್ಯ ರಾಯ್ ಕಪೂರ್ ಮತ್ತು ಅನನ್ಯಾ ಪಾಂಡೆ ಸ್ವಾಗತಿಸಿದರು. ಅವರ ಮ್ಯಾನೇಜರ್ ಪೂಜಾ ದದ್ಲಾನಿ ಕೂಡ ಗೌರಿಗೆ ಶುಭಾಶಯ ಕೋರಿದ್ದಾರೆ.

VISTARANEWS.COM


on

Shah Rukh Khan, Gauri Khan dance to Veer Zaara song
ಮಹತ್ವದ, ಕುತೂಹಲಕರ ಸುದ್ದಿಗಾಗಿ ಫಾಲೊ ಮಾಡಿ
Koo

ಬೆಂಗಳೂರು: ನಟ ಶಾರುಖ್ ಖಾನ್ ಭಾನುವಾರ ಸಂಜೆ (ಮಾ.3) (Shah Rukh Khan) ಗುಜರಾತ್‌ನ ಜಾಮ್‌ನಗರದಲ್ಲಿ ಅನಂತ್ ಅಂಬಾನಿ ಮತ್ತು ರಾಧಿಕಾ ಮರ್ಚೆಂಟ್ ಅವರ ವಿವಾಹಪೂರ್ವ ಸಂಭ್ರಮದಲ್ಲಿ ಭಾಗವಹಿಸಿದ್ದರು. ಶಾರುಖ್‌ ಜತೆ ಗೌರಿ ಖಾನ್ ಮತ್ತು ಮಗ ಅಬ್ರಾಮ್ ಖಾನ್ ಜತೆಗಿದ್ದರು. ಸಮಾರಂಭದಲ್ಲಿ ದಂಪತಿ ಒಟ್ಟಿಗೆ ನೃತ್ಯ ಮಾಡಿದ್ದಾರೆ. ಶಾರುಖ್ ಮತ್ತು ಗೌರಿ ʻವೀರ್-ಜಾರಾʼ ಸಿನಿಮಾದ ʻಮೈ ಯಹಾನ್ ಹೂನ್ʼ ಹಾಡಿಗೆ ಸ್ಟೆಪ್‌ ಹಾಕಿದ್ದಾರೆ.

ವೈರಲ್‌ ಆದ ಕ್ಲಿಪ್‌ನಲ್ಲಿ ಶಾರುಖ್ ಅವರು ಗೌರಿ ಮತ್ತು ಅಬ್ರಾಮ್ ಅವರೊಂದಿಗೆ ಪಾರ್ಟಿಗೆ ಆಗಮಿಸುತ್ತಿರುವುದು ಕಂಡುಬಂದಿದೆ. ಮಗನ ಕೈ ಹಿಡಿದ ಶಾರುಖ್ ಅವರನ್ನು ಆದಿತ್ಯ ರಾಯ್ ಕಪೂರ್ ಮತ್ತು ಅನನ್ಯಾ ಪಾಂಡೆ ಸ್ವಾಗತಿಸಿದರು. ಅವರ ಮ್ಯಾನೇಜರ್ ಪೂಜಾ ದದ್ಲಾನಿ ಕೂಡ ಗೌರಿಗೆ ಶುಭಾಶಯ ಕೋರಿದ್ದಾರೆ. ಈವೆಂಟ್‌ಗಾಗಿ ಶಾರುಖ್ ಕ್ರೀಮ್ ಕುರ್ತಾ, ಪೈಜಾಮ ಧರಿಸಿದ್ದರು. ಗೌರಿ ಕಡು ನೀಲಿ ಬಣ್ಣದ ಉಡುಪನ್ನು ಧರಿಸಿದ್ದರು. ಅಬ್ರಾಮ್ ಖಾನ್ ಕಪ್ಪು ಕುರ್ತಾ ಮತ್ತು ಪೈಜಾಮಾದಲ್ಲಿ ಮುದ್ದಾಗಿ ಕಾಣುತ್ತಿದ್ದರು.

ಇದನ್ನೂ ಓದಿ: Shah Rukh Khan: ಅಂಬಾನಿ ಮಗನ ಮದುವೆ: ʻಜೈ ಶ್ರೀ ರಾಮ್’ ಎಂದ ಶಾರುಖ್‌ ಖಾನ್‌!

ಪತ್ನಿ ಜತೆ ಶಾರುಖ್‌ ಡ್ಯಾನ್ಸ್‌

ಈವೆಂಟ್‌ನಲ್ಲಿ ಶಾರುಖ್ ಮತ್ತು ಗೌರಿ ʻವೀರ್-ಜಾರಾʼ ಸಿನಿಮಾದ ʻಮೈ ಯಹಾನ್ ಹೂನ್ʼ ಹಾಡಿಗೆ ನೃತ್ಯ ಮಾಡಿದರು. ಕ್ಲಿಪ್‌ನಲ್ಲಿ, ದಂಪತಿ ನೃತ್ಯ ಮಾಡುವಾಗ ಉದಿತ್ ನಾರಾಯಣ್ ಹಾಡನ್ನು ಹಾಡುವುದು ಕೇಳಿಸಿತು. ಜೋಡಿ ಡ್ಯಾನ್ಸ್‌ ಮಾಡುವಾಗ ನೆರದಿದ್ದವರು ಚಪ್ಪಾಳೆ ಕೂಡ ತಟ್ಟಿದ್ದಾರೆ.

ಉದ್ಯಮಿ ಮುಖೇಶ್ ಅಂಬಾನಿ ಅವರ ಕಿರಿಯ ಪುತ್ರನ ವಿಶೇಷ ದಿನದಂದು ಬಿಲ್ ಗೇಟ್ಸ್, ಮಾರ್ಕ್ ಜುಕರ್‌ಬರ್ಗ್, ರಿಹಾನ್ನಾ ಮತ್ತು ಇವಾಂಕಾ ಟ್ರಂಪ್ ಕೂಡ ಭಾಗಿಯಾಗಿದ್ದರು. ರಜನಿಕಾಂತ್, ಅಮಿತಾಭ್ ಬಚ್ಚನ್, ರಣಬೀರ್ ಕಪೂರ್, ಕರೀನಾ ಕಪೂರ್, ಕರಿಷ್ಮಾ ಕಪೂರ್, ಆಲಿಯಾ ಭಟ್, ದೀಪಿಕಾ ಪಡುಕೋಣೆ, ರಣವೀರ್ ಸಿಂಗ್, ಎಂಎಸ್ ಧೋನಿ ಮತ್ತು ಸಾನಿಯಾ ನೆಹ್ವಾಲ್ ಸೇರಿದಂತೆ ಸೆಲೆಬ್ರಿಟಿಗಳು ಕೂಡ ಭಾಗಿಯಾಗಿದ್ದರು. ಮೂರು ದಿನಗಳ ವಿವಾಹ ಪೂರ್ವ ಸಂಭ್ರಮ ಶುಕ್ರವಾರ (ಮಾ.1) ಆರಂಭವಾಗಿ ಭಾನುವಾರ (ಮಾ.3) ಮುಕ್ತಾಯವಾಯಿತು.

ಕ್ಷಣ ಕ್ಷಣದ ಮಾಹಿತಿಗಾಗಿ Vistara News FaceBook ಪೇಜ್ ಫಾಲೋ ಮಾಡಿ
ಮಹತ್ವದ ಮಾಹಿತಿಗಾಗಿ ವಿಸ್ತಾರ ನ್ಯೂಸ್ ಆ್ಯಪ್ ಉಚಿತವಾಗಿ ಡೌನ್ ಲೋಡ್ ಮಾಡಿಕೊಳ್ಳಿ: Andriod App | IOS App
Continue Reading
Click to comment

Leave a Reply

Your email address will not be published. Required fields are marked *

ಬಾಲಿವುಡ್

Lok Sabha Election 2024: ಕೊನೇ ಹಂತದ ಮತದಾನ; ವೋಟ್‌ ಮಾಡಿದ ನಟ ಮಿಥುನ್ ಚಕ್ರವರ್ತಿ

Lok Sabha Election 2024: ಭಾರತೀಯ ಜನತಾ ಪಕ್ಷ ನಾಯಕ ಮತ್ತು ನಟ ಮಿಥುನ್ ಚಕ್ರವರ್ತಿ ಲೋಕಸಭೆ ಚುನಾವಣೆಯ ಅಂತಿಮ ಹಂತದಲ್ಲಿ ಮತದಾನ ಮಾಡಿದರು ಪಶ್ಚಿಮ ಬಂಗಾಳದ ಬೆಲ್ಗಾಚಿಯಾದ ಮತಗಟ್ಟೆಯಲ್ಲಿ ಮತ ಚಲಾಯಿಸಿದರು. ಇತ್ತೀಚಿನ ವರ್ಷಗಳಲ್ಲಿ ಅವರು ಪೋಷಕ ಪಾತ್ರಗಳ ಮೂಲಕ ಗಮನ ಸೆಳೆಯುತ್ತಿದ್ದಾರೆ. ಹಿಂದಿ, ಬೆಂಗಾಲಿ, ಒಡಿಯಾ, ಭೋಜ್‌ಪುರಿ ಮತ್ತು ತಮಿಳು ಸೇರಿದಂತೆ ಇತರ ಭಾರತೀಯ ಭಾಷೆಗಳಲ್ಲಿ ಸುಮಾರು 350 ಚಿತ್ರಗಳಲ್ಲಿ ಮಿಥುನ್ ಚಕ್ರವರ್ತಿ ನಟಿಸಿದ್ದಾರೆ.

VISTARANEWS.COM


on

Lok Sabha Election 2024 Mithun Chakraborty casting his vote
Koo

ನವದೆಹಲಿ: ದೇಶದ ಭವಿಷ್ಯವನ್ನು ನಿರ್ಧರಿಸುವ ಲೋಕಸಭೆ ಚುನಾವಣೆ (Lok Sabha Election 2024) ಕೊನೆಯ ಹಂತಕ್ಕೆ ಬಂದಿದೆ. ಇಂದು (ಜೂನ್‌ 1) ಏಳನೇ ಅಥವಾ ಕೊನೆಯ ಹಂತದ ಮತದಾನ ನಡೆಯಲಿದ್ದು, ಇದರೊಂದಿಗೆ ಸಾರ್ವತ್ರಿಕ ಚುನಾವಣೆ ಕೊನೆಗೊಳ್ಳಲಿದೆ. ಜೂನ್‌ 4ರಂದು ಫಲಿತಾಂಶ ಪ್ರಕಟವಾಗಲಿದ್ದು, ಎಲ್ಲರ ಗಮನವೀಗ ಫಲಿತಾಂಶದ ಕಡೆ ವಾಲಿದೆ.  ಭಾರತೀಯ ಜನತಾ ಪಕ್ಷ ನಾಯಕ ಮತ್ತು ನಟ ಮಿಥುನ್ ಚಕ್ರವರ್ತಿ ಲೋಕಸಭೆ ಚುನಾವಣೆಯ ಅಂತಿಮ ಹಂತದಲ್ಲಿ ಮತದಾನ ಮಾಡಿದರು ಪಶ್ಚಿಮ ಬಂಗಾಳದ ಬೆಲ್ಗಾಚಿಯಾದ ಮತಗಟ್ಟೆಯಲ್ಲಿ ಮತ ಚಲಾಯಿಸಿದರು.

ಬಳಿಕ ಮಾಧ್ಯಮದ ಮುಂದೆ ಮಾತನಾಡಿ , “ನಾನು ಬಿಜೆಪಿ ಕಾರ್ಯಕರ್ತ, ನಾನು ನನ್ನ ಕರ್ತವ್ಯವನ್ನು ಮಾಡಿದ್ದೇನೆ. ನಾನು ನಾಳೆಯಿಂದ ಸಿನಿಮಾಗಳ ಬಗ್ಗೆ ಮಾತನಾಡುತ್ತೇನೆ. ಏಕೆಂದರೆ ನಾನು ನನ್ನ ಕುಟುಂಬದ ಹೊಟ್ಟೆ ಕೂಡ ತುಂಬಿಸಬೇಕುʼʼಎಂದರು.

ಇದನ್ನೂ ಓದಿ: Raghu Thatha: `ಪುಷ್ಪ 2′ ಸಿನಿಮಾಗೆ ಹೊಂಬಾಳೆ ಫಿಲ್ಮ್ಸ್‌ ಸೆಡ್ಡು: ‘ರಘು ತಾತಾ’ ರಿಲೀಸ್‌ ಡೇಟ್‌ ಅನೌನ್ಸ್‌!

ಇತ್ತೀಚಿನ ವರ್ಷಗಳಲ್ಲಿ ಅವರು ಪೋಷಕ ಪಾತ್ರಗಳ ಮೂಲಕ ಗಮನ ಸೆಳೆಯುತ್ತಿದ್ದಾರೆ. ಹಿಂದಿ, ಬೆಂಗಾಲಿ, ಒಡಿಯಾ, ಭೋಜ್‌ಪುರಿ ಮತ್ತು ತಮಿಳು ಸೇರಿದಂತೆ ಇತರ ಭಾರತೀಯ ಭಾಷೆಗಳಲ್ಲಿ ಸುಮಾರು 350 ಚಿತ್ರಗಳಲ್ಲಿ ಮಿಥುನ್ ಚಕ್ರವರ್ತಿ ನಟಿಸಿದ್ದಾರೆ.

ಉತ್ತರ ಪ್ರದೇಶದ 13 ಲೋಕಸಭೆ ಕ್ಷೇತ್ರಗಳು, ಪಂಜಾಬ್‌ 13, ಪಶ್ಚಿಮ ಬಂಗಾಳ 9, ಬಿಹಾರ 8, ಒಡಿಶಾ 6, ಹಿಮಾಚಲ ಪ್ರದೇಶ 4, ಜಾರ್ಖಂಡ್‌ 3 ಹಾಗೂ ಚಂಡೀಗಢದ 1 ಲೋಕಸಭೆ ಕ್ಷೇತ್ರದಲ್ಲಿ ಬೆಳಗ್ಗೆ 7 ಗಂಟೆಯಿಂದಲೇ ಮತದಾನ ನಡೆಯಲಿದೆ. ಸಂಜೆ 6 ಗಂಟೆವರೆಗೆ ಜನ ಹಕ್ಕು ಚಲಾಯಿಸಬಹುದಾಗಿದ್ದು, ಶಾಂತಿಯುತ ಹಾಗೂ ಪಾರದರ್ಶಕ ಚುನಾವಣೆಗಾಗಿ ಆಯೋಗವು ಬಿಗಿ ಬಂದೋಬಸ್ತ್‌ ಸೇರಿ ಹಲವು ಕ್ರಮಗಳನ್ನು ತೆಗೆದುಕೊಂಡಿದೆ. ಪ್ರಧಾನಿ ನರೇಂದ್ರ ಮೋದಿ ಸೇರಿ ಹಲವರ ಭವಿಷ್ಯವು ಶನಿವಾರ ಮತಯಂತ್ರಗಳಲ್ಲಿ ಭದ್ರವಾಗಲಿದೆ.

ಇಂದು ಸಂಜೆ ಎಕ್ಸಿಟ್‌ ಪೋಲ್‌

ಶನಿವಾರ ಸಂಜೆ 6 ಗಂಟೆಗೆ ಮತದಾನ ಮುಗಿಯಲಿದ್ದು, 6.30ರ ಸುಮಾರಿಗೆ ಮತಗಟ್ಟೆ ಸಮೀಕ್ಷೆಗಳು ಪ್ರಕಟವಾಗಲಿವೆ. ಹಾಗಾಗಿ, ರಾಜಕೀಯ ನಾಯಕರು, ತಜ್ಞರು, ನಾಗರಿಕರು ಸೇರಿದಂತೆ ಎಲ್ಲರ ಗಮನ ಈಗ ಎಕ್ಸಿಟ್ ಪೋಲ್‌ಗಳತ್ತ ಇದೆ. ಜೂನ್‌ 1ರಂದು ಸಂಜೆ 6.30ರ ಹೊತ್ತಿಗೆ ವಿವಿಧ ಮಾಧ್ಯಮಗಳ ಎಕ್ಸಿಟ್‌ ಪೋಲ್‌ ಪ್ರಕಟವಾಗಲಿದೆ. ಕಳೆದ ಅನೇಕ ವರ್ಷಗಳಲ್ಲಿ ಎಕ್ಸಿಟ್ ಪೋಲ್‌ಗಳು ಮತದಾರರ ಚಿತ್ತವನ್ನು ಅಳೆಯುವಲ್ಲಿ ಯಶಸ್ವಿಯಾಗಿದೆ. ಈ ಮೂಲಕ ಚುನಾವಣಾ ಆಯೋಗದ ಅಧಿಕೃತ ಘೋಷಣೆಯ ಮೊದಲೇ ಚುನಾವಣಾ ಫಲಿತಾಂಶದ ನಿಖರವಾದ ವಿವರಣೆ ಲಭ್ಯವಾಗುತ್ತದೆ.

ಎಕ್ಸಿಟ್ ಪೋಲ್ ಜನರ ಮನಸ್ಥಿತಿಯನ್ನು ಹೇಳುತ್ತವೆ. ಆದರೆ ಅದರ ನಿಖರತೆಯು ಭೌಗೋಳಿಕ ವ್ಯಾಪ್ತಿ ಮತ್ತು ಮತದಾರರ ನಿಷ್ಕಪಟತೆಯಂತಹ ಬಹು ಅಂಶಗಳ ಮೇಲೆ ಅವಲಂಬಿತವಾಗಿರುತ್ತದೆ. ಸಾಮಾನ್ಯವಾಗಿ ಜನರು ಗುಂಪುಗಳಲ್ಲಿ ಮತ ಚಲಾಯಿಸಿದಾಗ ಗಾಳಿ ಯಾವ ಕಡೆಗೆ ಬೀಸುತ್ತಿದೆ ಎಂಬುದನ್ನು ಅಳೆಯುವುದು ಸುಲಭ. ಆದರೆ ಒಂದು ಭಾಗದ ಜನರು ತಮ್ಮ ಒಲವನ್ನು ತೋರಿಸದಿರಲು ನಿರ್ಧರಿಸಿದರೆ ಅಲ್ಲಿಯೇ ಸಮೀಕ್ಷೆದಾರರು ಸಂಖ್ಯೆಗಳನ್ನು ತಪ್ಪಾಗಿ ಬಿಡುತ್ತದೆ. ಎಕ್ಸಿಟ್ ಪೋಲ್‌ಗಳು ಕೆಲವೊಮ್ಮೆ ಸರಿ ಮತ್ತು ಕೆಲವೊಮ್ಮೆ ತಪ್ಪಾಗಿವೆ.

Continue Reading

ಕರ್ನಾಟಕ

Hum Do Humare Barah: ʼಹಮ್ ದೋ, ಹಮಾರೇ ಬಾರಹ್ʼ ಚಿತ್ರ ಬಿಡುಗಡೆಗೆ ಮುಸ್ಲಿಮರ ವಿರೋಧ: “ಪೆನ್‌ಡ್ರೈವ್‌ ಕೇಸ್‌ ಮೇಲೆ ಮಾಡಿ” ಎಂದು ಗರಂ!

Hum Do Humare Barah:ʼಹಮ್‌ ದೋ, ಹಮಾರೇ ಬಾರಹ್ʼ (hum do humare barah) ಚಿತ್ರ ನಿಗದಿಯಂತೆ ಜೂನ್ 7ರಂದು ಬಿಡುಗಡೆಯಾಗಬೇಕಿದೆ. ಆದರೆ ಬಾಲಿವುಡ್ ಹಿರಿಯ ನಟ ಅನ್ನು ಕಪೂರ್ ಅಭಿನಯದ ಈ ಚಿತ್ರದ ಸುತ್ತ ಈಗಲೇ ವಿವಾದದ ಕಾರ್ಮೋಡ ಕವಿದಿದೆ.

VISTARANEWS.COM


on

hum do humare barah
Koo

ವಿಜಯನಗರ: ಮುಸ್ಲಿಂ ಸಮುದಾಯವನ್ನು (muslim community) ಕೇಂದ್ರೀಕರಿಸಿದ ಚಿತ್ರಕತೆ (Screen play) ಹೊಂದಿರುವ ʼಹಮ್‌ ದೋ, ಹಮಾರೇ ಬಾರಹ್ʼ (Hum Do Humare Barah) ಚಿತ್ರ ಬಿಡುಗಡೆಗೆ ಆಕ್ಷೇಪಣೆ ವ್ಯಕ್ತವಾಗಿದೆ. ಹೊಸಪೇಟೆಯ ಅಂಜುಮನ್ ಖಿದ್ಮತೆ ಇಸ್ಲಾಂ ಸಂಘಟನೆ ಮತ್ತು ಮುಸ್ಲಿಂ ಸಮಾಜದಿಂದ ವಿರೋಧ ವ್ಯಕ್ತವಾಗಿದ್ದು, ರಾಜ್ಯದಲ್ಲಿ ಇದರ ಬಿಡುಗಡೆ ತಡೆಯುವಂತೆ ವಿಜಯನಗರ ಜಿಲ್ಲಾಧಿಕಾರಿ ಮೂಲಕ ರಾಜ್ಯ ಸರ್ಕಾರಕ್ಕೆ ಮನವಿ ಮಾಡಲಾಗಿದೆ.

ಯಾವುದೀ ಸಿನಿಮಾ?

ʼಹಮ್‌ ದೋ, ಹಮಾರೇ ಬಾರಹ್ʼ (hum do humare barah) ಚಿತ್ರ ನಿಗದಿಯಂತೆ ಜೂನ್ 7ರಂದು ಬಿಡುಗಡೆಯಾಗಬೇಕಿದೆ. ಆದರೆ ಬಾಲಿವುಡ್ ಹಿರಿಯ ನಟ ಅನ್ನು ಕಪೂರ್ ಅಭಿನಯದ ಈ ಚಿತ್ರದ ಸುತ್ತ ಈಗಲೇ ವಿವಾದದ ಕಾರ್ಮೋಡ ಕವಿದಿದೆ. ಒಂದೆಡೆ, ಚಿತ್ರದ ಪಾತ್ರವರ್ಗ ಮತ್ತು ಸಿಬ್ಬಂದಿಗೆ ಕೊಲೆ ಮತ್ತು ಅತ್ಯಾಚಾರದ ಬೆದರಿಕೆಗಳು ಬರುತ್ತಿವೆ. ಮಹಾರಾಷ್ಟ್ರದಲ್ಲಿ ಅಜಿತ್ ಪವಾರ್ ಅವರ ನ್ಯಾಷನಲಿಸ್ಟ್ ಕಾಂಗ್ರೆಸ್ ಪಾರ್ಟಿ (ಎನ್‌ಸಿಪಿ) ಕೂಡ ಇದರ ವಿರುದ್ಧ ಪ್ರತಿಭಟನೆಗೆ ಮುಂದಾಗಿದೆ. ಚಿತ್ರದ ಬಿಡುಗಡೆಯನ್ನು ನಿಷೇಧಿಸುವಂತೆ ಎನ್‌ಸಿಪಿ ರಾಜ್ಯ ಸರ್ಕಾರಕ್ಕೆ ಮನವಿ ಮಾಡಿದೆ. ನಟ ಅನ್ನು ಕಪೂರ್ ಮಹಾರಾಷ್ಟ್ರ ಪೊಲೀಸ್ ಮತ್ತು ಗೃಹ ಸಚಿವಾಲಯದಿಂದ ಭದ್ರತೆಯನ್ನು ಕೋರಿದ್ದಾರೆ.

ಕಮಲ್ ಚಂದ್ರ ನಿರ್ದೇಶನದ ಈ ಚಿತ್ರದಲ್ಲಿ ಅನ್ನು ಕಪೂರ್ ಹೊರತಾಗಿ ಪಾರ್ಥ್ ಸಮಾನ್, ಅಶ್ವಿನಿ ಕಲ್ಸೇಕರ್ ಮತ್ತು ಪರಿತೋಷ್ ತಿವಾರಿ ಪ್ರಮುಖ ಪಾತ್ರಗಳಲ್ಲಿದ್ದಾರೆ. ಇತ್ತೀಚೆಗೆ ಈ ಚಿತ್ರವು ಕಾನ್ ಚಲನಚಿತ್ರೋತ್ಸವದಲ್ಲಿ ಪ್ರಥಮ ಪ್ರದರ್ಶನಗೊಂಡಿತು. ಅಲ್ಲಿ ಅದು ಪ್ರಶಂಸಿಸಲ್ಪಟ್ಟಿದೆ. ಈ ಚಿತ್ರದ ಟೀಸರ್ ನೋಡಿದ ಮೇಲೆ ನಮಗೆ, ನಮ್ಮ ಕಲಾವಿದರಿಗೆ ಹಾಗೂ ನಿರ್ದೇಶಕರಿಗೆ ಜೀವ ಬೆದರಿಕೆ ಬರುತ್ತಿದೆ ಎಂದು ಅನ್ನು ಕಪೂರ್ ಹೇಳಿದ್ದಾರೆ. “ಐಸಿಸ್‌ ಮಾದರಿಯಲ್ಲಿ ಶಿರಚ್ಛೇದ ಮಾಡಿ ಕೊಲ್ಲುವುದಾಗಿ ಬೆದರಿಕೆ ಹಾಕಲಾಗುತ್ತಿದೆ. ನಮ್ಮ ಚಿತ್ರಕ್ಕೆ ಸಂಬಂಧಿಸಿದ ಎಲ್ಲಾ ಕಲಾವಿದರಿಗೆ ರಕ್ಷಣೆ ನೀಡುವಂತೆ ನಾನು ಮಹಾರಾಷ್ಟ್ರ ಪೊಲೀಸರು, ಗೃಹ ಸಚಿವರು ಮತ್ತು ಗೃಹ ಸಚಿವಾಲಯವನ್ನು ಕೋರುತ್ತೇನೆ” ಎಂದಿದ್ದಾರೆ.

“ನಮಗೆ ಸಾಮಾಜಿಕ ಜಾಲತಾಣಗಳಲ್ಲಿ ಮತ್ತು ಫೋನ್ ಮೂಲಕ ಬೆದರಿಕೆ ಹಾಕಲಾಗುತ್ತಿದೆ. ಆದರೆ ಭಯಪಡುವ ಅಗತ್ಯವಿಲ್ಲ ಎಂದು ನನ್ನ ಚಿತ್ರತಂಡಕ್ಕೆ ಹೇಳುತ್ತೇನೆ. ಸಿನಿಮಾ ನೋಡದೆ ಅದರ ಬಗ್ಗೆ ಯಾವುದೇ ಅಭಿಪ್ರಾಯ ಮೂಡಿಸಿಕೊಳ್ಳಬೇಡಿ ಎಂದು ಸಾರ್ವಜನಿಕರಲ್ಲಿ ಮನವಿ ಮಾಡುತ್ತೇನೆ. ನಮ್ಮ ಸಿನಿಮಾ ಮಹಿಳಾ ಸಬಲೀಕರಣದ ಬಗ್ಗೆ ಮಾತನಾಡುತ್ತದೆ. ಇದು ಜನಸಂಖ್ಯೆ ನಿಯಂತ್ರಣದ ಬಗ್ಗೆ ಮಾತನಾಡುತ್ತದೆ. ಯಾವುದೇ ಧರ್ಮವನ್ನು ಅವಮಾನಿಸುವುದು ಅಥವಾ ಮಾನಹಾನಿ ಮಾಡುವುದು ನಮ್ಮ ಉದ್ದೇಶವಲ್ಲ” ​​ಎಂದು ಅನ್ನು ಕಪೂರ್‌ ಹೇಳಿದ್ದಾರೆ.

ಕರ್ನಾಟಕದಲ್ಲೂ ಆಕ್ಷೇಪ

ಹೊಸಪೇಟೆಯ ಅಂಜುಮನ್ ಖಿದ್ಮತೆ ಇಸ್ಲಾಂ ಸಂಘಟನೆ, “ಈ ಚಿತ್ರದ ನಿರ್ದೇಶಕ ಮತ್ತು ನಿರ್ಮಾಪಕರ ಮೇಲೆ ಕಾನೂನು ಕ್ರಮ ಜರುಗಿಸಬೇಕು. ಶಾಂತಿ ಸೌಹಾರ್ದತೆ ಕದಡುವ ಕೆಲಸ ಈ ಸಿನಿಮಾದಿಂದ ಮಾಡಲಾಗುತ್ತಿದೆ. ಚಿತ್ರೀಕರಣ ಮಾಡಬೇಕು ಅಂದ್ರೆ ಪ್ರಜ್ವಲ್ ರೇವಣ್ಣರವರ ಪೆನ್ ಡ್ರೈವ್ ವಿಷಯ ಮೇಲೆ ಚಿತ್ರ ಮಾಡಲಿ. ಸಮಾಜದಲ್ಲಿ ಹೆಣ್ಣು ಮಕ್ಕಳ ಮೇಲೆ ನಡೆಯುತ್ತಿರುವ ದೌರ್ಜನ್ಯದ ಬಗ್ಗೆ ಚಿತ್ರ ಮಾಡಲಿ. ಸಾಮಾನ್ಯ ಜನರು ಪಡುತ್ತಿರುವ ಕಷ್ಟಗಳನ್ನು ಅರ್ಥ ಮಾಡಿಕೊಂಡು ಚಿತ್ರೀಕರಣ ಮಾಡಲಿ. ಧರ್ಮವನ್ನು ಮುಂದಿಟ್ಟು ಚಿತ್ರೀಕರಣ ಮಾಡೋದು ಎಷ್ಟರ ಮಟ್ಟಿಗೆ ಸರಿ? ರಾಜ್ಯ ಸರ್ಕಾರ ಚಿತ್ರ ಬಿಡುಗಡೆಗೆ ತಡೆ ಹಾಕಬೇಕು” ಎಂದು ಒತ್ತಾಯಿಸಿದೆ.‌

ಇದನ್ನೂ ಓದಿ: Pralhad Joshi: ಕನ್ನಡಿಗರ ತೆರಿಗೆಯಲ್ಲಿ ಕೇರಳಿಗರನ್ನು ಸಾಕುತ್ತಿದ್ದಾರೆ ಸಿದ್ದರಾಮಯ್ಯ: ಜೋಶಿ ಆರೋಪ

Continue Reading

ಬಾಲಿವುಡ್

Saiyami Kher: ಜರ್ಮನಿಯ ಫೇಮಸ್‌ ಐರನ್‌ಮ್ಯಾನ್ ಟ್ರಯಥ್ಲಾನ್‌ನಲ್ಲಿ ಭಾಗವಹಿಸಲಿದ್ದಾರೆ ಖ್ಯಾತ ನಟಿ!

Saiyami Kher: ಐರನ್‌ಮ್ಯಾನ್ ಟ್ರಯಥ್ಲಾನ್ ಬರ್ಲಿನ್‌ಗೆ ಸಮೀಪವಿರುವ ಪಟ್ಟಣವಾದ ಎರ್ಕ್ನರ್‌ನಲ್ಲಿ ನಡೆಯಲಿದೆ. ಭಾಗವಹಿಸುವವರು ಈಜು, ಸೈಕ್ಲಿಂಗ್ ಮತ್ತು ಓಟ ಸೇರಿದಂತೆ ಈವೆಂಟ್‌ಗಳಲ್ಲಿ ಸ್ಪರ್ಧಿಸುತ್ತಾರೆ. ಸಯ್ಯಾಮಿ ಖೇರ್ ಹೊರತುಪಡಿಸಿ, ಐರನ್‌ಮ್ಯಾನ್ ಟ್ರಯಥ್ಲಾನ್‌ನಲ್ಲಿ ಭಾಗವಹಿಸಿದ ಏಕೈಕ ಬಾಲಿವುಡ್ ಸೆಲೆಬ್ರಿಟಿ ಮಿಲಿಂದ್ ಸೋಮನ್.

VISTARANEWS.COM


on

Saiyami Kher to participate in Ironman Triathlon in Germany
Koo

ಬೆಂಗಳೂರು: ನಟಿ ಸಯ್ಯಾಮಿ ಖೇರ್ (Saiyami Kher ) ಸೆಪ್ಟೆಂಬರ್ 15ರಂದು ಜರ್ಮನಿಯಲ್ಲಿ ನಡೆಯಲಿರುವ ಐರನ್‌ಮ್ಯಾನ್ ಟ್ರಯಥ್ಲಾನ್‌ನಲ್ಲಿ ಭಾಗವಹಿಸಲಿದ್ದಾರೆ ಎಂದು ನಟಿ ಇತ್ತೀಚೆಗೆ ಇನ್‌ಸ್ಟಾಗ್ರಾಮ್‌ನಲ್ಲಿ ಪೋಸ್ಟ್ ಮಾಡುವ ಮೂಲಕ ಹೇಳಿಕೊಂಡಿದ್ದಾರೆ. ನಟಿ ಈಜು, ಸೈಕ್ಲಿಂಗ್ ಮತ್ತು ಜಿಮ್‌ನಲ್ಲಿ ತರಬೇತಿ ಪಡೆಯುವ ವಿಡಿಯೊ ಇದರಲ್ಲಿದೆ.

ನಟಿ ಪೋಸ್ಟ್‌ನಲ್ಲಿ ʻʻಕೊರೊನಾ ಆದ ಬಳಿಕ ಸಮಯ ಹೇಗೆ ಸಾಗಿತು ಗೊತ್ತಾಗಿಲ್ಲ. ಶೂಟಿಂಗ್‌ ಸೆಟ್‌ನಲ್ಲಿ ಪ್ರತಿದಿನ ಆನಂದಿಸುತ್ತಿದ್ದೆ. ಜೀವನ ರೋಲರ್ ಕೋಸ್ಟರ್ ಆಗಿತ್ತು. ಕಳೆದ ವರ್ಷ ಬೈಕ್ ಅಪಘಾತ ಕೂಡ ಆಯ್ತು. ಎಂಟು ತಿಂಗಳ ಕಾಲ ವ್ಯಾಯಾಮ ಏನೂ ಇಲ್ಲದೆ ಹಾಗೇ ಇದ್ದೆ. ಇದಾದ ಬಳಿಕ , ಟ್ರಯಥ್ಲಾನ್ ಈವೆಂಟ್‌ಗೆ ತರಬೇತಿ ಪಡೆಯುವುದು ಅತ್ಯಂತ ಕಠಿಣವಾಗಿತ್ತು. ಟ್ರಯಥ್ಲಾನ್ ಈವೆಂಟ್‌ಗಾಗಿ ಎರಡು ತಿಂಗಳ ತರಬೇತಿಯನ್ನು ಪಡೆದ ನಂತ ಇಂದು ಐರನ್‌ಮ್ಯಾನ್ ಟ್ರಯಥ್ಲಾನ್‌ನಲ್ಲಿ ಭಾಗಿಯಾಗಲು ಸಿದ್ಧನಿದ್ದೇನೆʼʼ ಎಂದು ಬರೆದುಕೊಂಡಿದ್ದಾರೆ.

ಐರನ್‌ಮ್ಯಾನ್ ಟ್ರಯಥ್ಲಾನ್ ಬರ್ಲಿನ್‌ಗೆ ಸಮೀಪವಿರುವ ಪಟ್ಟಣವಾದ ಎರ್ಕ್ನರ್‌ನಲ್ಲಿ ನಡೆಯಲಿದೆ. ಭಾಗವಹಿಸುವವರು ಈಜು, ಸೈಕ್ಲಿಂಗ್ ಮತ್ತು ಓಟ ಸೇರಿದಂತೆ ಈವೆಂಟ್‌ಗಳಲ್ಲಿ ಸ್ಪರ್ಧಿಸುತ್ತಾರೆ. ಸಯ್ಯಾಮಿ ಖೇರ್ ಹೊರತುಪಡಿಸಿ, ಐರನ್‌ಮ್ಯಾನ್ ಟ್ರಯಥ್ಲಾನ್‌ನಲ್ಲಿ ಭಾಗವಹಿಸಿದ ಏಕೈಕ ಬಾಲಿವುಡ್ ಸೆಲೆಬ್ರಿಟಿ ಮಿಲಿಂದ್ ಸೋಮನ್.

ಇದನ್ನೂ ಓದಿ: Raghu Thatha: `ಪುಷ್ಪ 2′ ಸಿನಿಮಾಗೆ ಹೊಂಬಾಳೆ ಫಿಲ್ಮ್ಸ್‌ ಸೆಡ್ಡು: ‘ರಘು ತಾತಾ’ ರಿಲೀಸ್‌ ಡೇಟ್‌ ಅನೌನ್ಸ್‌!

ಸಿನಿಮಾ ವಿಚಾರಕ್ಕೆ ಬಂದರೆ, ಸಯ್ಯಾಮಿ ʻಅಗ್ನಿʼ ಚಿತ್ರದಲ್ಲಿ ಪ್ರತೀಕ್ ಗಾಂಧಿ ಮತ್ತು ದಿವ್ಯೆಂದು ಶರ್ಮಾ ಅವರೊಂದಿಗೆ ನಟಿಸಲಿದ್ದಾರೆ. ಫರ್ಹಾನ್ ಅಖ್ತರ್ ಮತ್ತು ರಿತೇಶ್ ಸಿಧ್ವಾನಿ ಅವರ ಬೆಂಬಲದೊಂದಿಗೆ ರಾಹುಲ್ ಧೋಲಾಕಿಯಾ ನಿರ್ದೇಶನವಿದೆ.

ಮರಾಠಿಯ ಖ್ಯಾತ ನಟಿ ಉಷಾ ಕಿರಣ್ ಅವರ ಮೊಮ್ಮಗಳು ಮತ್ತು ಪ್ರಮುಖ ಬಾಲಿವುಡ್ ನಟಿ ತನ್ವಿ ಅಜ್ಮಿ ಅವರ ಸೊಸೆ. ರಾಕೇಶ್ ಓಂಪ್ರಕಾಶ್ ಮೆಹ್ರಾ ನಿರ್ದೇಶಿಸಿದ ಮತ್ತು 2016 ರಲ್ಲಿ ಬಿಡುಗಡೆಯಾದ “ಮಿರ್ಜ್ಯಾ” ಚಿತ್ರದಲ್ಲಿನ ಅಭಿನಯಕ್ಕಾಗಿ ಸೈಯಾಮಿ ಖೇರ್ ಮನ್ನಣೆ ಗಳಿಸಿದರು.

Continue Reading

ಬಾಲಿವುಡ್

Malaika Arora: 38ರ ಅರ್ಜುನ್‌ ಕಪೂರ್‌ಗೆ 50ರ ಮಲೈಕಾ ಅರೋರಾ ಸಹವಾಸ ಸಾಕಾಯ್ತಾ?!

Malaika Arora: ಮಲೈಕಾ ಅರೋರಾ ಅವರಿಗೆ ಈಗ 50 ವರ್ಷ. ಅರ್ಜುನ್ ಕಪೂರ್​ಗೆ 38. ಇಬ್ಬರ ಮಧ್ಯೆ ಸುಮಾರು 11 ವರ್ಷಗಳ ಅಂತರ ಇದೆ. ಅರ್ಜುನ್ ಕಪೂರ್ ವಯಸ್ಸಿನಲ್ಲಿ ಸಣ್ಣವರು. ಮಾತ್ರವಲ್ಲ ಕೆಲವು ದಿನಗಳಿಂದ ಮಗು ವಿಚಾರವಾಗಿ ಸಾಕಷ್ಟು ಟ್ರೋಲ್‌ ಆಗಿತ್ತು ಜೋಡಿ. ಮಲೈಕಾ ಹಾಗೂ ಅರ್ಜುನ್ ಕಪೂರ್​ಗೆ ಮದುವೆ ಯಾವಾಗ ಎನ್ನುವ ಪ್ರಶ್ನೆ ಎದುರಾಗುತ್ತಲೇ ಇತ್ತು. ಆದರೆ, ಈ ಬಗ್ಗೆ ಈ ಜೋಡಿ ಮೌನ ವಹಿಸಿದ್ದರು.

VISTARANEWS.COM


on

Malaika Arora respectfully part ways Here what we know
Koo

ಬೆಂಗಳೂರು: ಮಲೈಕಾ ಅರೋರಾ (Malaika Arora) ಮತ್ತು ಅರ್ಜುನ್ ಕಪೂರ್(Arjun Kapoor) ಆಗಾಗ ವಕೇಶನ್‌ ಮೂಡ್‌ನಲ್ಲಿರುವ ಫೋಟೊವನ್ನು ಶೇರ್‌ ಮಾಡಿಕೊಳ್ಳುತ್ತಲೇ ಇರುತ್ತಾರೆ. ಜತೆಗೆ ಅದೆಷ್ಟೋ ಬಾರಿ ಸಾರ್ವಜನಿಕವಾಗಿ ಕಾಣಿಸಿದ್ದುಂಟು. ಆದರೀಗ ಜೋಡಿ ಬೇರೆ ಆಗುವ ನಿರ್ಧಾರಕ್ಕೆ ಬಂದಿದ್ದಾರೆ ಎನ್ನಲಾಗಿದೆ. ಪರಸ್ಪರರ ಭವಿಷ್ಯದ ಒಳಿತಾಗಿ ಈ ನಿರ್ಧಾರ ತೆಗೆದುಕೊಂಡಿದ್ದಾರೆ ಎನ್ನಲಾಗಿದೆ.

ಮಲೈಕಾ ಮತ್ತು ಅರ್ಜುನ್ ʼವಿಶೇಷವಾದ ಸಂಬಂಧʼವನ್ನು ಹೊಂದಿದ್ದರು. ಇಬ್ಬರೂ ಪರಸ್ಪರರ ಹೃದಯದಲ್ಲಿ ವಿಶೇಷ ಸ್ಥಾನವನ್ನು ಉಳಿಸಿಕೊಂಡಿದ್ದಾರೆ. ಆದರೆ ಇದೀಗ ಜೋಡಿ ಬೇರೆಯಾಗಬೇಕು ಎಂದು ನಿರ್ಧರಿಸಿದೆ. ಇಷ್ಟೂ ವರ್ಷಗಳಲ್ಲಿ, ಅವರು ತಮ್ಮ ಸಂಬಂಧಕ್ಕೆ ಗೌರವವನ್ನು ನೀಡಿದ್ದಾರೆ. ಒಂದು ವೇಳೆ ಬೇರೆಯಾಗಲು ನಿರ್ಧರಿಸಿದರೂ ಪರಸ್ಪರ ಅದೇ ಗೌರವವನ್ನು ಕಾಪಾಡಿಕೊಂಡು ಹೋಗುತ್ತಾರೆ ಎಂದು ವರದಿಯಾಗಿದೆ.

ಮಲೈಕಾ ಅರೋರಾ ಅವರಿಗೆ ಈಗ 50 ವರ್ಷ. ಅರ್ಜುನ್ ಕಪೂರ್​ಗೆ 38. ಇಬ್ಬರ ಮಧ್ಯೆ ಸುಮಾರು 11 ವರ್ಷಗಳ ಅಂತರ ಇದೆ. ಅರ್ಜುನ್ ಕಪೂರ್ ವಯಸ್ಸಿನಲ್ಲಿ ಸಣ್ಣವರು. ಮಾತ್ರವಲ್ಲ ಕೆಲವು ದಿನಗಳಿಂದ ಮಗು ವಿಚಾರವಾಗಿ ಸಾಕಷ್ಟು ಟ್ರೋಲ್‌ ಆಗಿತ್ತು ಜೋಡಿ. ಮಲೈಕಾ ಹಾಗೂ ಅರ್ಜುನ್ ಕಪೂರ್​ಗೆ ಮದುವೆ ಯಾವಾಗ ಎನ್ನುವ ಪ್ರಶ್ನೆ ಎದುರಾಗುತ್ತಲೇ ಇತ್ತು. ಆದರೆ, ಈ ಬಗ್ಗೆ ಈ ಜೋಡಿ ಮೌನ ವಹಿಸಿದ್ದರು.

ಇತ್ತೀಚಿನ ವರದಿಗಳ ಪ್ರಕಾರ ಇಬ್ಬರ ನಡುವೆ ಬಿರುಕು ಮೂಡಿದೆ ಎನ್ನಲಾಗಿದೆ. ಅರ್ಜುನ್‌ ಕಪೂರ್ ಕುಟುಂಬದವರನ್ನು ಅನ್​ಫಾಲೋ ಮಾಡಿದ್ದಾರೆ ಮಲೈಕಾ ಅರೋರಾ. ಅಷ್ಟೇ ಅಲ್ಲದೇ ಅರ್ಜುನ್ ಕಪೂರ್ ಈಗ ನಟಿ ಕುಶಾ ಕಪಿಲಾ (Kusha Kapila) ಅವರೊಂದಿಗೆ ಡೇಟಿಂಗ್ ಮಾಡುತ್ತಿದ್ದಾರೆ ಎಂತಲೂ ವರದಿಗಳಿವೆ.

ಇದನ್ನೂ ಓದಿ: Raghu Thatha: `ಪುಷ್ಪ 2′ ಸಿನಿಮಾಗೆ ಹೊಂಬಾಳೆ ಫಿಲ್ಮ್ಸ್‌ ಸೆಡ್ಡು: ‘ರಘು ತಾತಾ’ ರಿಲೀಸ್‌ ಡೇಟ್‌ ಅನೌನ್ಸ್‌!

ಈ ಮೊದಲು ಮಲೈಕಾ ಅವರು ಅರ್ಜುನ್ ಕಪೂರ್ ತಂದೆ ಬೋನಿ ಕಪೂರ್, ಕುಟುಂಬದ ಇತರ ಸದಸ್ಯರಾದ ಅನಿಲ್ ಕಪೂರ್, ಜಾನ್ವಿ ಕಪೂರ್, ಖುಷಿ ಕಪೂರ್ ಅವರನ್ನು ಇನ್​ಸ್ಟಾಗ್ರಾಮ್​ನಲ್ಲಿ ಫಾಲೋ ಮಾಡುತ್ತಿದ್ದರು. ಆದರೆ, ಇವರುಗಳನ್ನು ಮಲೈಕಾ ಅನ್​ಫಾಲೋ ಮಾಡಿದ್ದಾರೆ. ಆದರೆ, ಅರ್ಜುನ್ ಕಪೂರ್ ಅವರನ್ನು ಈಗಲೂ ಅವರು ಫಾಲೋ ಮಾಡುತ್ತಿದ್ದಾರೆ. ಇತ್ತೀಚೆಗೆ ಮುಂಬೈನಲ್ಲಿರುವ ಕರಣ್ ಜೋಹರ್ ಅವರ ಮನೆಯಲ್ಲಿ ಅರ್ಜುನ್ ಮತ್ತು ಕುಶಾ ಒಟ್ಟಿಗೆ ಪಾರ್ಟಿ ಮಾಡಿದ್ದಾಗಿನಿಂದಲೂ ಸಂಬಂಧದ ವದಂತಿಗಳು ಪ್ರಾರಂಭವಾದವು.

ಮಲೈಕಾ ಈ ಹಿಂದೆ ನಟ, ನಿರ್ಮಾಪಕ ಅರ್ಬಾಜ್ ಖಾನ್ ಅವರನ್ನು ವಿವಾಹವಾಗಿದ್ದರು. ಇಬ್ಬರು 2016ರಲ್ಲಿ ವಿಚ್ಛೇದನ ಪಡೆದುಕೊಂಡಿದ್ದಾರೆ. ಅವರಿಗೆ ಅರ್ಹಾನ್ ಖಾನ್ ಹೆಸರಿನ ಮಗನಿದ್ದಾನೆ. ಮಲೈಕಾ ಮತ್ತು ಅರ್ಜುನ್ ಹಲವು ವರ್ಷಗಳಿಂದ ಪ್ರೀತಿಯಲ್ಲಿದ್ದು, 2019ರಲ್ಲಿ ಅದನ್ನು ಸಾರ್ವಜನಿಕವಾಗಿ ಹೇಳಿಕೊಂಡಿದ್ದಾರೆ.

ಸಿನಿಮಾ ವಿಚಾರಕ್ಕೆ ಬಂದರೆ ಅರ್ಜುನ್‌ ಕಪೂರ್‌ ಖ್ಯಾತ ನಿರ್ದೇಶಕ ರೋಹಿತ್ ಶೆಟ್ಟಿ ಅವರ ʼಸಿಂಗಮ್ ಅಗೇನ್ʼನಲ್ಲಿ ಕಾಣಿಸಿಕೊಳ್ಳಲಿದ್ದಾರೆ. ಈ ಚಿತ್ರದಲ್ಲಿ ಅವರು ಅಜಯ್‌ ದೇವಗನ್‌ಗೆ ಪ್ರತಿಸ್ಪರ್ಧಿಯಾಗಿ ಕಾಣಿಸಿಕೊಳ್ಳಲಿದ್ದಾರೆ. ಚಿತ್ರದಲ್ಲಿ ದೀಪಿಕಾ ಪಡುಕೋಣೆ, ರಣವೀರ್ ಸಿಂಗ್, ಅಕ್ಷಯ್ ಕುಮಾರ್ ಮತ್ತು ಕರೀನಾ ಕಪೂರ್ ಖಾನ್ ಸೇರಿದಂತೆ ಇತರರು ಪ್ರಮುಖ ಪಾತ್ರಗಳಲ್ಲಿ ನಟಿಸಿದ್ದಾರೆ. ಆಗಸ್ಟ್ 15ರಂದು ಚಿತ್ರಮಂದಿರಗಳಲ್ಲಿ ಬಿಡುಗಡೆ ಮಾಡಲು ನಿರ್ಧರಿಸಲಾಗಿದೆ.

Continue Reading
Advertisement
shatru bhairavi yaga
ಪ್ರಮುಖ ಸುದ್ದಿ11 mins ago

Shatru Bhairavi Yaga: ಶತ್ರು ಭೈರವಿ ಯಾಗ ನಡೆದಿಲ್ಲ, ಪ್ರಾಣಿಬಲಿಯೂ ಇಲ್ಲ: ಕೇರಳ ಸರಕಾರದಿಂದಲೇ ತನಿಖೆ, ಸ್ಪಷ್ಟನೆ

Bigg Boss OTT 3 Anil Kapoor Replaces Salman Khan As Host
ಒಟಿಟಿ16 mins ago

Bigg Boss OTT 3: ಶುರುವಾಗಲಿದೆ ಬಿಗ್​ ಬಾಸ್​ ಒಟಿಟಿ 3: ನಿರೂಪಣೆಗೆ ಸಲ್ಮಾನ್​ ಖಾನ್​ ಬದಲು ಅನಿಲ್​ ಕಪೂರ್!

Lok Sabha Election
Lok Sabha Election 202422 mins ago

Lok Sabha Election: ವಾರಾಣಸಿಯಲ್ಲಿ ಮೋದಿ ವಿರುದ್ಧ ಕಣಕ್ಕಿಳಿದಿರುವ 6 ಅಭ್ಯರ್ಥಿಗಳ ಸಾಮರ್ಥ್ಯ ಎಷ್ಟಿದೆ?

IND vs PAK
ಕ್ರೀಡೆ28 mins ago

IND vs PAK T20 World Cup: ಪಾಕಿಸ್ತಾನ​ ವಿರುದ್ಧ ಭಾರತಕ್ಕೆ ಗೆಲುವು ಖಚಿತ ಎಂದ ಪಾಕ್​ ಆಟಗಾರ

Lok Sabha Election 2024 Mithun Chakraborty casting his vote
ಬಾಲಿವುಡ್38 mins ago

Lok Sabha Election 2024: ಕೊನೇ ಹಂತದ ಮತದಾನ; ವೋಟ್‌ ಮಾಡಿದ ನಟ ಮಿಥುನ್ ಚಕ್ರವರ್ತಿ

IND vs BAN
ಕ್ರೀಡೆ1 hour ago

IND vs BAN: ಇಂದು ಬಾಂಗ್ಲಾ ವಿರುದ್ಧ ಅಭ್ಯಾಸ ಪಂದ್ಯ; ಕೊಹ್ಲಿ ಆಡುವುದು ಅನುಮಾನ

Exit Poll
Lok Sabha Election 20241 hour ago

Exit Poll: ಇಂದು ಸಂಜೆ 6.30ಕ್ಕೆ ಎಕ್ಸಿಟ್ ಪೋಲ್ ರಿಸಲ್ಟ್; ಮತಗಟ್ಟೆ ಸಮೀಕ್ಷೆ ಹೇಗೆ ನಡೆಸುತ್ತಾರೆ?

Kannada Cinema In OTT bad manners 02 Kannada Movie
ಸ್ಯಾಂಡಲ್ ವುಡ್1 hour ago

Kannada Cinema In OTT: ಒಟಿಟಿಗೆ ಲಗ್ಗೆ ಇಟ್ಟ ʼಬ್ಯಾಡ್‌ ಮ್ಯಾನರ್ಸ್‌ʼ, ‘O2’; ಸ್ಟ್ರೀಮಿಂಗ್ ಎಲ್ಲಿ?

hum do humare barah
ಕರ್ನಾಟಕ1 hour ago

Hum Do Humare Barah: ʼಹಮ್ ದೋ, ಹಮಾರೇ ಬಾರಹ್ʼ ಚಿತ್ರ ಬಿಡುಗಡೆಗೆ ಮುಸ್ಲಿಮರ ವಿರೋಧ: “ಪೆನ್‌ಡ್ರೈವ್‌ ಕೇಸ್‌ ಮೇಲೆ ಮಾಡಿ” ಎಂದು ಗರಂ!

Neeraj Chopra
ಕ್ರೀಡೆ2 hours ago

Neeraj Chopra: 2 ತಿಂಗಳು ವಿದೇಶದಲ್ಲಿ ಕಠಿಣ ತರಬೇತಿ ಪಡೆಯಲಿದ್ದಾರೆ ನೀರಜ್ ಚೋಪ್ರಾ

Sharmitha Gowda in bikini
ಕಿರುತೆರೆ8 months ago

Geetha Serial Kannada: ನಿದ್ದೆ ಕದ್ದ ಚೋರಿ! ನಟಿ `ಭಾನುಮತಿ’ ಹಾಟ್‌ ಪೋಟೊಗಳಿಗೆ ಫ್ಯಾನ್ಸ್ ಫುಲ್ ಫಿದಾ

Kannada Serials
ಕಿರುತೆರೆ8 months ago

Kannada Serials TRP: 2ನೇ ಸ್ಥಾನದಲ್ಲಿ 2 ಧಾರಾವಾಹಿಗಳು; ಟಿಆರ್‌ಪಿ ರೇಸ್‌ನಲ್ಲಿಲ್ಲ ಭಾಗ್ಯಲಕ್ಷ್ಮೀ!

Bigg Boss- Saregamapa 20 average TRP
ಕಿರುತೆರೆ8 months ago

Kannada Serials TRP: ಏಳನೇ ಸ್ಥಾನಕ್ಕೆ ʻಅಮೃತಧಾರೆʼ ಕುಸಿತ; ಬಿಗ್‌ ಬಾಸ್‌-ಸರಿಗಮಪ ಟಿಆರ್‌ಪಿ ಎಷ್ಟು?

galipata neetu
ಕಿರುತೆರೆ6 months ago

Kanyadana Serial: ಕಿರುತೆರೆಗೆ ಮತ್ತೆ ಎಂಟ್ರಿ ಕೊಟ್ಟ ʻಗಾಳಿಪಟʼ ಖ್ಯಾತಿಯ ʻನೀತುʼ!

Kannada Serials
ಕಿರುತೆರೆ8 months ago

Kannada Serials TRP: ನಾಲ್ಕನೇ ಸ್ಥಾನಕ್ಕೆ ಕುಸಿತ ಕಂಡ ʻಸೀತಾ ರಾಮʼ; ಟಿಆರ್‌ಪಿ ರೇಸ್‌ಗೆ ʻಭಾಗ್ಯಲಕ್ಷ್ಮಿʼ ಬ್ಯಾಕ್‌!

Kannada Serials
ಕಿರುತೆರೆ8 months ago

Kannada Serials TRP: ಟಿಆರ್‌ಪಿಯಲ್ಲಿ ʻಭಾಗ್ಯಲಕ್ಷ್ಮೀʼ ಹವಾ; ʻಪುಟ್ಟಕ್ಕನ ಮಕ್ಕಳುʼ ಧಾರಾವಾಹಿಗೆ ಸಂಕಷ್ಟ!

Bigg Boss' dominates TRP; Sita Rama fell to the sixth position
ಕಿರುತೆರೆ7 months ago

Kannada Serials TRP: ಟಿಆರ್‌ಪಿಯಲ್ಲಿ ʻಬಿಗ್ ಬಾಸ್ʼದೇ ಮೇಲುಗೈ; 6ನೇ ಸ್ಥಾನಕ್ಕೆ ಕುಸಿದ ʻಸೀತಾ ರಾಮʼ

geetha serial Dhanush gowda engagement
ಕಿರುತೆರೆ6 months ago

Dhanush Gowda: ಗೀತಾ ಧಾರಾವಾಹಿ ನಟನ ನಿಶ್ಚಿತಾರ್ಥ; ಭವ್ಯಾಳ ಕಮೆಂಟ್‌ ಬಾಕ್ಸ್‌ ಆಫ್‌!

varun
ಕಿರುತೆರೆ6 months ago

Brindavana Serial: ʼಬೃಂದಾವನʼ ಧಾರಾವಾಹಿಯಲ್ಲಿ ದೊಡ್ಡ ಟ್ವಿಸ್ಟ್‌; ಪ್ರಮುಖ ಪಾತ್ರಧಾರಿಯೇ ಬದಲು

Kannada Serials
ಕಿರುತೆರೆ9 months ago

Kannada Serials TRP: ಟಿಆರ್‌ಪಿಯಲ್ಲಿ ಏರಿಕೆ ಕಂಡ ʻಅಮೃತಧಾರೆʼ; ʻಗಟ್ಟಿಮೇಳʼಕ್ಕೆ ನಾಲ್ಕನೇ ಸ್ಥಾನ!

Assault Case in Shivamogga
ಕ್ರೈಂ2 days ago

Assault Case : ಶಿವಮೊಗ್ಗದಲ್ಲಿ ಮತ್ತೆ ಬಾಲ ಬಿಚ್ಚಿದ ಪುಂಡರು; ಗಾಂಜಾ ನಶೆಯಲ್ಲಿ ವಾಹನಗಳು ಪೀಸ್‌ ಪೀಸ್‌

Karnataka weather Forecast
ಮಳೆ4 days ago

Karnataka Weather : ಚಿಕ್ಕಮಗಳೂರಲ್ಲಿ ಭಾರಿ ಮಳೆ; ಯಾದಗಿರಿಯಲ್ಲಿ ಕರೆಂಟ್‌ ಕಟ್‌, ಜನರೇಟರ್‌ನಿಂದ ಮೊಬೈಲ್‌ಗಳಿಗೆ ಚಾರ್ಜಿಂಗ್‌!

tumkur murder
ತುಮಕೂರು4 days ago

Tumkur Murder : ಮಗುವಿನ ಮುಂದೆಯೇ ಹೆಂಡತಿಯ ಕತ್ತು, ದೇಹವನ್ನು ಕತ್ತರಿಸಿ ಬಿಸಾಡಿದ ದುಷ್ಟ

Karnataka Weather Forecast
ಮಳೆ5 days ago

Karnataka Weather : ಕಡಲತೀರದಲ್ಲಿ ಅಲೆಗಳ ಅಬ್ಬರ, ಪ್ರವಾಸಿಗರಿಗೆ ಕಟ್ಟೆಚ್ಚರ; ನಾಳೆಯೂ ಗಾಳಿ ಸಹಿತ ಮಳೆ ಅಬ್ಬರ

Karnataka Rain
ಮಳೆ6 days ago

Karnataka Rain : ಯಾದಗಿರಿಯಲ್ಲಿ ಬಿರುಗಾಳಿ ಸಹಿತ ಮಳೆ; ಸಿಡಿಲು ಬಡಿದು ಎಮ್ಮೆಗಳು ಸಾವು

Basavanagudi News
ಬೆಂಗಳೂರು6 days ago

Basavanagudi News : ಪೂಜಾ ಸಾಮಗ್ರಿಗೆ ಒನ್‌ ಟು ಡಬಲ್‌ ರೇಟ್‌; ದೊಡ್ಡ ಗಣಪತಿ ದೇಗುಲದಲ್ಲಿ ಕೈ ಕೈ ಮಿಲಾಯಿಸಿದ ಭಕ್ತರು-ವ್ಯಾಪಾರಿಗಳು

Karnataka Rain
ಮಳೆ7 days ago

Karnataka Rain : ಭಾರಿ ಮಳೆಗೆ ರಸ್ತೆ ಕಾಣದೆ ರಾಜಕಾಲುವೆಗೆ ಉರುಳಿದ ಆಟೋ; ಚಾಲಕ ಸ್ಥಳದಲ್ಲೇ ಸಾವು

dina bhavishya read your daily horoscope predictions for May 23 2024
ಭವಿಷ್ಯ1 week ago

Dina Bhavishya : 12 ರಾಶಿಯವರ ಇಂದಿನ ಭವಿಷ್ಯ ಹೇಗಿದೆ? ಯಾರಿಗೆ ಶುಭ, ಯಾರಿಗೆ ಅಶುಭ ಫಲ?

Karnataka Weather Forecast
ಮಳೆ1 week ago

Karnataka Weather : ಮುಂದುವರಿಯಲಿದೆ ವರುಣಾರ್ಭಟ; ಬೆಂಗಳೂರಲ್ಲೂ ಭಾರಿ ಮಳೆ ನಿರೀಕ್ಷೆ!

Karnataka Rain
ಮಳೆ2 weeks ago

Karnataka Rain : ಭಾರಿ ಮಳೆಗೆ ಕರೆಂಟ್‌ ಕಟ್‌, ಕತ್ತಲಲ್ಲೇ ರೋಗಿಗಳಿಗೆ ಟ್ರೀಟ್‌ಮೆಂಟ್‌; ಮರ ಬಿದ್ದರೂ ಪಾರಾದ ತಾಯಿ-ಮಗ

ಟ್ರೆಂಡಿಂಗ್‌