Nikki Haley: ಅಮೆರಿಕ ಅಧ್ಯಕ್ಷೀಯ ಅಭ್ಯರ್ಥಿ ಚುನಾವಣೆ; ಟ್ರಂಪ್‌ ವಿರುದ್ಧ ಭಾರತೀಯ ಮೂಲದ ನಿಕ್ಕಿ ಹ್ಯಾಲೆಗೆ ಮೊದಲ ಜಯ - Vistara News

ವಿದೇಶ

Nikki Haley: ಅಮೆರಿಕ ಅಧ್ಯಕ್ಷೀಯ ಅಭ್ಯರ್ಥಿ ಚುನಾವಣೆ; ಟ್ರಂಪ್‌ ವಿರುದ್ಧ ಭಾರತೀಯ ಮೂಲದ ನಿಕ್ಕಿ ಹ್ಯಾಲೆಗೆ ಮೊದಲ ಜಯ

Nikki Haley: ಅಮೆರಿಕ ಅಧ್ಯಕ್ಷೀಯ ಅಭ್ಯರ್ಥಿ ಚುನಾವಣೆಯಲ್ಲಿ ರಿಪಬ್ಲಿಕನ್‌ ಪಕ್ಷದ, ಭಾರತೀಯ ಮೂಲದ ನಿಕ್ಕಿ ಹ್ಯಾಲಿ ವಾಷಿಂಗ್ಟನ್‌ ಡಿಸಿಯಲ್ಲಿ ಡೊನಾಲ್ಡ್ ಟ್ರಂಪ್ ವಿರುದ್ಧ ಜಯ ಗಳಿಸಿದ್ದಾರೆ.

VISTARANEWS.COM


on

nikki and trump
ಮಹತ್ವದ, ಕುತೂಹಲಕರ ಸುದ್ದಿಗಾಗಿ ಫಾಲೊ ಮಾಡಿ
Koo

ವಾಷಿಂಗ್ಟನ್‌: ಅಮೆರಿಕ ಅಧ್ಯಕ್ಷೀಯ ಚುನಾವಣೆ (United States presidential election) ಸದ್ಯ ವಿಶ್ವದ ಕುತೂಹಲ ಕೆರಳಿಸಿದೆ. ನವೆಂಬರ್‌ 5ರಂದು ಚುನಾವಣೆ ನಡೆಯಲಿದ್ದು, ಇದಕ್ಕೆ ಸಂಬಂಧಿಸಿದ ಚಟುವಟಿಕೆ ಬಿರುಸುಗೊಂಡಿದೆ. ಈ ಮಧ್ಯೆ ಮಹತ್ವದ ಬೆಳವಣಿಗೆಯಲ್ಲಿ ರಿಪಬ್ಲಿಕನ್ ಪಕ್ಷದ ಪ್ರಬಲ ಸ್ಪರ್ಧಿ, ಭಾರತೀಯ ಮೂಲದ ನಿಕ್ಕಿ ಹ್ಯಾಲೆ (Nikki Haley) ಅವರು ವಾಷಿಂಗ್ಟನ್‌ ಡಿಸಿಯ ಪ್ರಾಥಮಿಕ ಚುನಾವಣೆಯಲ್ಲಿ ಮಾಜಿ ಅಧ್ಯಕ್ಷ ಡೊನಾಲ್ಡ್‌ ಟ್ರಂಪ್‌ (Donald Trump) ವಿರುದ್ಧ ಗೆಲುವು ಸಾಧಿಸಿದ್ದಾರೆ. ಡೊನಾಲ್ಡ್ ಟ್ರಂಪ್ ವಿರುದ್ಧದ ಸ್ಪರ್ಧೆಯಲ್ಲಿ ಇದು ನಿಕ್ಕಿ ಅವರ ಮೊದಲ ಗೆಲುವು. ಸೂಪರ್ ಮಂಗಳವಾರ (Super Tuesday)ಕ್ಕೆ ಸ್ವಲ್ಪ ಮುಂಚಿತವಾಗಿ ಅವರ ಗೆಲುವು ಈ ಅತ್ಯಂತ ಪ್ರಮುಖ ಎಂದು ವಿಶ್ಲೇಷಿಸಲಾಗುತ್ತಿದೆ.

ಡೊನಾಲ್ಡ್ ಟ್ರಂಪ್ ವಿರುದ್ಧ ಉಳಿದುಕೊಂಡಿರುವ ಏಕೈಕ ಸ್ಪರ್ಧಿ ನಿಕ್ಕಿ ಹ್ಯಾಲೆ, ಶೇ 62.9 ಮತಗಳನ್ನು ಪಡೆದರು. ಟ್ರಂಪ್ ಶೇ. 33.2 ಮತ ಗಳಿಸಿದರು. ಈ ಗೆಲುವಿನ ಬಳಿಕ ಪ್ರತಿಕ್ರಿಯಿಸಿದ ನಿಕ್ಕಿ ಅವರ ವಕ್ತಾರ ಒಲಿವಿಯಾ ಪೆರೆಜ್-ಕ್ಯೂಬಾಸ್, “ರಿಪಬ್ಲಿಕನ್‌ ಪಕ್ಷದವರು ಡೊನಾಲ್ಡ್ ಟ್ರಂಪ್ ಮತ್ತು ಅವರ ಎಲ್ಲ ಅವ್ಯವಸ್ಥೆಯನ್ನು ತಿರಸ್ಕರಿಸುತ್ತಿರುವುದು ಇದರಿಂದ ಸ್ಪಷ್ಟವಾಗುತ್ತಿದೆʼʼ ಎಂದು ಹೇಳಿದ್ದಾರೆ.

ವಾಷಿಂಗ್ಟನ್ ಡಿಸಿ ನಗರ ಪ್ರದೇಶವಾಗಿದ್ದು ಹೆಚ್ಚಿನ ಪ್ರಮಾಣದ ನಾಗರಿಕರು ಶಿಕ್ಷಣ ಹೊಂದಿದವರು. ಇಲ್ಲಿ ನಿಕ್ಕಿ ಪ್ರಾಬಲ್ಯ ಹೊಂದಿದ್ದರೆ ಟ್ರಂಪ್ ಅವರ ಪ್ರಭಾವ ಗ್ರಾಮಿಣ ಪ್ರದೇಶದಲ್ಲಿ ಹೆಚ್ಚಿದೆ. ರಾಜಧಾನಿಯಲ್ಲಿ ಟ್ರಂಪ್ ಮುಖಭಂಗ ಅನುಭವಿಸುತ್ತಿರುವುದು ಇದೇ ಮೊದಲಲ್ಲ. 2016ರಲ್ಲಿ ಡಿಸ್ಟ್ರಿಕ್ಟ್ ಆಫ್ ಕೊಲಂಬಿಯಾದಲ್ಲಿ ನಡೆದ ಕೊನೆಯ ಸ್ಪರ್ಧಾತ್ಮಕ ರಿಪಬ್ಲಿಕನ್ ನಾಮನಿರ್ದೇಶನ ಸ್ಪರ್ಧೆಯಲ್ಲಿ ಅವರು ಶೇ. 14ಕ್ಕಿಂತ ಕಡಿಮೆ ಮತಗಳನ್ನು ಪಡೆದುಕೊಂಡಿದ್ದರು. ನಾಳೆ (ಮಾರ್ಚ್‌ 5) ಅಮೆರಿಕದ ಒಂದು ಭಾಗವಾದ 15 ರಾಜ್ಯಗಳಲ್ಲಿ ಅಧ್ಯಕ್ಷೀಯ ಚುನಾವಣೆಯ ಪ್ರಾಥಮಿಕ ಮತದಾನ ನಡೆಯಲಿದೆ.

ದಕ್ಷಿಣ ಕೆರೊಲಿನಾದಲ್ಲಿ ಸೋತಿದ್ದ ನಿಕ್ಕಿ

ಇತ್ತೀಚೆಗೆ ದಕ್ಷಿಣ ಕೆರೊಲಿನಾದಲ್ಲಿ ನಡೆದ ರಿಪಬ್ಲಿಕನ್‌ ಪಕ್ಷದ ಅಭ್ಯರ್ಥಿ ಆಯ್ಕೆಯ ಸ್ಪರ್ಧೆಯಲ್ಲಿ 51 ವರ್ಷದ ನಿಕ್ಕಿ ಹ್ಯಾಲೆ ಅವರನ್ನು 77 ವರ್ಷದ ಟ್ರಂಪ್‌ ಸೋಲಿಸಿದ್ದರು. ಟ್ರಂಪ್‌ ಕೆಲವು ದಿನಗಳ ಹಿಂದೆ ನೆವಡಾ ರಾಜ್ಯದಲ್ಲಿ ನಡೆದ ಸ್ಪರ್ಧೆಯಲ್ಲಿಯೂ ವಿಜಯ ಸಾಧಿಸಿದ್ದರು. ನೆವಡಾದಲ್ಲಿ ನಡೆದ ಚುನಾವಣೆಯಲ್ಲಿ ನಿಕ್ಕಿ ಹ್ಯಾಲೆ ಸ್ಪರ್ಧಿಸಿರಲಿಲ್ಲ.

ಗವರ್ನರ್‌ ಮತ್ತು ವಿಶ್ವಸಂಸ್ಥೆಯ ರಾಯಭಾರಿಯಾಗಿದ್ದ ನಿಕ್ಕಿ ಹ್ಯಾಲೆ ದಕ್ಷಿಣ ಕೆರೊಲಿನಾದ ಜಿದ್ದಾಜಿದ್ದಿನ ಹೋರಾಟದಲ್ಲಿ ಟ್ರಂಪ್‌ ವಿರುದ್ಧ ಸೋಲೊಪ್ಪಿಕೊಂಡಿದ್ದರು. ಆದರೆ ಕಣದಿಂದ ಹಿಂದೆ ಸರಿಯುವ ಪ್ರಶ್ನೆಯೇ ಇಲ್ಲ ಎನ್ನುವ ಮೂಲಕ ಮತ್ತೆ ಹೋರಾಟದ ಸೂಚನೆ ನೀಡಿದ್ದರು. ಅದರಂತೆ ಈ ಬಾರಿ ಗೆಲುವು ದಾಖಲಿಸಿದ್ದಾರೆ.

ಇದನ್ನೂ ಓದಿ: Nikki Haley: ಅಮೆರಿಕ ಅಧ್ಯಕ್ಷೀಯ ಅಭ್ಯರ್ಥಿ ಚುನಾವಣೆ; ಭಾರತೀಯ ಮೂಲದ ನಿಕ್ಕಿ ಹ್ಯಾಲೆ ವಿರುದ್ಧ ಗೆದ್ದ ಟ್ರಂಪ್‌

ನಿಕ್ಕಿ ಅವರ ತಂದೆ-ತಾಯಿ ಭಾರತೀಯ ಮೂಲದವರು. ಪಂಜಾಬ್‌ನ ಅಮೃತ್‌ಸರದ ಸಿಖ್‌ ಕುಟುಂಬದವರಾದ ಇವರು ಅನೇಕ ವರ್ಷಗಳ ಹಿಂದೆ ಕೆಲಡಾಕ್ಕೆ ವಲಸೆ ಹೋಗಿ ಬಳಿಕ ಅಮೆರಿಕದಲ್ಲಿ ನೆಲೆಸಿದ್ದರು. ವಿಶೇಷ ಎಂದರೆ ಅಮೆರಿಕದ ಅಧ್ಯಕ್ಷ ಸ್ಥಾನಕ್ಕೆ ಇನ್ನೊಬ್ಬ ಭಾರತೀಯ ಮೂಲದ ಬಯೋಟೆಕ್ ಉದ್ಯಮಿ ವಿವೇಕ್ ರಾಮಸ್ವಾಮಿ ಸ್ಪರ್ಧಿಸಿದ್ದರು. ಆದರೆ ಇತ್ತೀಚೆಗೆ ರೇಸ್‌ನಿಂದ ಹೊರಗೆ ಬಂದು ಟ್ರಂಪ್ ಅವರನ್ನು ಬೆಂಬಲಿಸಲು ನಿರ್ಧರಿಸಿದ್ದರು.

ಈ ಸಂಗತಿಯ ಕುರಿತು ನಿಮ್ಮ ಅನಿಸಿಕೆ ಏನು? ಕಮೆಂಟ್ ಮೂಲಕ ತಿಳಿಸಿ

ಕ್ಷಣ ಕ್ಷಣದ ಮಾಹಿತಿಗಾಗಿ Vistara News FaceBook ಪೇಜ್ ಫಾಲೋ ಮಾಡಿ
ಮಹತ್ವದ ಮಾಹಿತಿಗಾಗಿ ವಿಸ್ತಾರ ನ್ಯೂಸ್ ಆ್ಯಪ್ ಉಚಿತವಾಗಿ ಡೌನ್ ಲೋಡ್ ಮಾಡಿಕೊಳ್ಳಿ: Andriod App | IOS App
Continue Reading
Click to comment

Leave a Reply

Your email address will not be published. Required fields are marked *

ಪ್ರಮುಖ ಸುದ್ದಿ

ಮಹಿಳೆಯ ಕುತ್ತಿಗೆಗೆ ಬೆಲ್ಟ್‌ನಿಂದ ಬಿಗಿದು, ರಸ್ತೆ ಬದಿಯೇ ಅತ್ಯಾಚಾರ ಎಸಗಿದ ದುಷ್ಟ; ಭೀಕರ ವಿಡಿಯೊ ಇಲ್ಲಿದೆ

ಮಹಿಳೆಯ ಕುತ್ತಿಗೆಗೆ ಹಿಂದಿನಿಂದ ಬೆಲ್ಟ್‌ ಮೂಲಕ ಬಿಗಿಯುವ, ಆಕೆಯನ್ನು ಎಳೆಯುವ, ಆಕೆಯನ್ನು ಪ್ರಜ್ಞೆತಪ್ಪಿಸಿದ ದೃಶ್ಯವು ಸಿಸಿಟಿವಿಯಲ್ಲಿ ಸೆರೆಯಾಗಿದೆ. ಕಾರಿನ ಮಧ್ಯೆಯೇ ಮಹಿಳೆ ಮೇಲೆ ಅತ್ಯಾಚಾರ ಎಸಗಿದ್ದಾನೆ ಎಂಬುದಾಗಿ ಪೊಲೀಸರು ತಿಳಿಸಿದ್ದಾರೆ.

VISTARANEWS.COM


on

US
Koo

ವಾಷಿಂಗ್ಟನ್‌: ಅಮೆರಿಕದ ನ್ಯೂಯಾರ್ಕ್‌ ಸಿಟಿಯಲ್ಲಿ (New York City) ದುಷ್ಟನೊಬ್ಬ ಮಹಿಳೆಯ ಕುತ್ತಿಗೆಗೆ ಬೆಲ್ಟ್‌ ಬಿಗಿದು, ಆಕೆಯನ್ನು ದರದರನೆ ಎಳೆದುಕೊಂಡು ಹೋಗಿ, ರಸ್ತೆಯ ಬದಿಯೇ ಅತ್ಯಾಚಾರ ಎಸಗಿದ್ದಾನೆ. ಮಹಿಳೆಯ ಮೇಲೆ ಮೃಗೀಯವಾಗಿ ದೌರ್ಜನ್ಯ ಎಸಗುವ ವಿಡಿಯೊ ಈಗ ಸಾಮಾಜಿಕ ಜಾಲತಾಣಗಳಲ್ಲಿ ವೈರಲ್‌ (Viral Video) ಆಗಿದ್ದು, ಜನರಿಂದ ಭಾರಿ ಆಕ್ರೋಶ ವ್ಯಕ್ತವಾಗುತ್ತಿದೆ.

ನ್ಯೂಯಾರ್ಕ್‌ ಸಿಟಿಯ ಸೌತ್‌ ಬ್ರಾಂಕ್ಸ್‌ನ ಈಸ್ಟ್‌ 152ನೇ ಸ್ಟ್ರೀಟ್‌ನಲ್ಲಿ ಮೇ 1ರಂದು ಬೆಳಗಿನ ಜಾವ 3 ಗಂಟೆ ಸುಮಾರಿಗೆ ಮನೆಗೆ ನಡೆದುಕೊಂಡು ಹೋಗುವಾಗ ದುರುಳನು ಕೃತ್ಯ ಎಸಗಿದ್ದಾನೆ. ಸುಮಾರು 45 ವರ್ಷದ ಮಹಿಳೆಯು ನಡೆದುಕೊಂಡು ಹೋಗುವಾಗ ಮುಸುಕುಧಾರಿ ವ್ಯಕ್ತಿಯು ಆಕೆಯ ಕುತ್ತಿಗೆಗೆ ಬೆಲ್ಟ್‌ನಿಂದ ಬಿಗಿದಿದ್ದಾನೆ. ರಸ್ತೆ ಬದಿ ನಿಂತಿದ್ದ ಎರಡು ಕಾರುಗಳ ಮಧ್ಯದ ಜಾಗದವರೆಗೆ ಆಕೆಯನ್ನು ಎಳೆದುಕೊಂಡು ಹೋಗಿದ್ದಾನೆ. ಅಲ್ಲಿ, ಮಹಿಳೆಯ ಮೇಲೆ ಅತ್ಯಾಚಾರ ಎಸಗಿದ್ದಾನೆ ಎಂದು ಪೊಲೀಸ್‌ ಮೂಲಗಳು ತಿಳಿಸಿವೆ.

ಮಹಿಳೆಯ ಕುತ್ತಿಗೆಗೆ ಹಿಂದಿನಿಂದ ಬೆಲ್ಟ್‌ ಮೂಲಕ ಬಿಗಿಯುವ, ಆಕೆಯನ್ನು ಎಳೆಯುವ, ಆಕೆಯನ್ನು ಪ್ರಜ್ಞೆತಪ್ಪಿಸಿದ ದೃಶ್ಯವು ಸಿಸಿಟಿವಿಯಲ್ಲಿ ಸೆರೆಯಾಗಿದೆ. ಕಾರಿನ ಮಧ್ಯೆಯೇ ಮಹಿಳೆ ಮೇಲೆ ಅತ್ಯಾಚಾರ ಎಸಗಿದ್ದಾನೆ ಎಂಬುದಾಗಿ ಪೊಲೀಸರು ತಿಳಿಸಿದ್ದಾರೆ. ಮಹಿಳೆಯನ್ನು ಪ್ರಜ್ಞೆ ತಪ್ಪಿಸಿದ ಬಳಿಕ ಅತ್ಯಾಚಾರ ಎಸಗಿದ ದುಷ್ಟನು, ಆಕೆಯನ್ನು ಅಲ್ಲಿಯೇ ಬಿಟ್ಟು ಪರಾರಿಯಾಗಿದ್ದಾನೆ. ಪ್ರಕರಣಕ್ಕೆ ಸಂಬಂಧಿಸಿದಂತೆ ತನಿಖೆ ನಡೆಸುತ್ತಿರುವ ಪೊಲೀಸರು ಆರೋಪಿಗಾಗಿ ಬಲೆ ಬೀಸಿದ್ದಾರೆ ಎಂದು ತಿಳಿದುಬಂದಿದೆ.

ಪ್ರಜ್ಞೆ ತಪ್ಪಿಸಿ, ಅತ್ಯಾಚಾರ ಎಸಗಿದ ಬಳಿಕ ದುಷ್ಟನು ಮಹಿಳೆಯನ್ನು ಅಲ್ಲಿಯೇ ಬಿಟ್ಟು ಪರಾರಿಯಾಗಿದ್ದಾನೆ. ರಸ್ತೆ ಬದಿ ಬಿದ್ದಿದ್ದ ಮಹಿಳೆಯನ್ನು ಬೆಳಗ್ಗೆ ಆಸ್ಪತ್ರೆಗೆ ದಾಖಲಿಸಲಾಗಿದೆ. ಸದ್ಯ, ಮಹಿಳೆಯು ಪ್ರಾಣಾಪಾಯದಿಂದ ಪಾರಾಗಿದ್ದಾರೆ ಎಂದು ಮೂಲಗಳು ತಿಳಿಸಿವೆ. ಕಳೆದ ತಿಂಗಳಷ್ಟೇ ಮ್ಯಾನ್ಹಟನ್‌ನಲ್ಲಿ ಯುವತಿಯೊಬ್ಬರಿಗೆ ದುಷ್ಟನೊಬ್ಬ ರಾತ್ರಿ ಲೈಂಗಿಕ ಕಿರುಕುಳ ನೀಡಿದ್ದ. ಇದಾದ ಬಳಿಕವೂ ದುಷ್ಕರ್ಮಿಯ ಸುಳಿವು ಪೊಲೀಸರಿಗೆ ಸಿಕ್ಕಿರಲಿಲ್ಲ. ಹಾಗಾಗಿ, ಅಮೆರಿಕದಲ್ಲಿ ಹೆಣ್ಣುಮಕ್ಕಳ ಸುರಕ್ಷತೆ ಕುರಿತು ಸಾರ್ವಜನಿಕವಾಗಿ ಆಕ್ರೋಶ ವ್ಯಕ್ತವಾಗುತ್ತಿದೆ.

ಇದನ್ನೂ ಓದಿ: Hindu Girl: ಹಿಂದು ಬಾಲಕಿಯ ಅತ್ಯಾಚಾರಗೈದು, ಇಸ್ಲಾಂ ಪಾಲಿಸುವಂತೆ ಒತ್ತಾಯ; ಇಬ್ರಾಹಿಂ ವಿರುದ್ಧ ಕೇಸ್

Continue Reading

ವಿದೇಶ

ಮನೆಗೆ ನುಗ್ಗಿ ತಮ್ಮದೇ ದೇಶದ ಕಪ್ಪುವರ್ಣೀಯ ಸೇನಾಧಿಕಾರಿಯನ್ನು ಕೊಂದ ಅಮೆರಿಕ ಪೊಲೀಸರು; Video ಇದೆ

ಮೇ 3ರಂದು ಪೊಲೀಸರಿಗೆ ಮಹಿಳೆಯೊಬ್ಬರು ಕರೆ ಮಾಡಿದ್ದಾರೆ. ಪಕ್ಕದ ಫ್ಲ್ಯಾಟ್‌ನಲ್ಲಿ ಗಂಡ-ಹೆಂಡತಿ ಜಗಳವಾಡುತ್ತಿದ್ದಾರೆ. ಇಲ್ಲಿ ದೊಡ್ಡ ಗಲಾಟೆ ನಡೆದಿದ್ದು, ಅಕ್ಕ-ಪಕ್ಕದ ಫ್ಲ್ಯಾಟ್‌ನವರಿಗೆ ತೊಂದರೆಯಾಗುತ್ತಿದೆ ಎಂಬುದಾಗಿ ಪೊಲೀಸರಿಗೆ ಮಹಿಳೆ ತಿಳಿಸಿದ್ದಾರೆ. ಆದರೆ, ಪೊಲೀಸ್‌ ಅಧಿಕಾರಿಯು ಮಹಿಳೆ ಹೇಳಿದ ಅಪಾರ್ಟ್‌ಮೆಂಟ್‌ ಬದಲು, ಬೇರೊಂದು ಅಪಾರ್ಟ್‌ಮೆಂಟ್‌ಗೆ ತೆರಳಿದ್ದೇ ವಾಯುಪಡೆ ಅಧಿಕಾರಿಯ ದುರಂತ ಸಾವಿಗೆ ಕಾರಣವಾಗಿದೆ ಎಂದು ತಿಳಿದುಬಂದಿದೆ.

VISTARANEWS.COM


on

US Officer
Koo

ವಾಷಿಂಗ್ಟನ್:‌ ಯಾವುದೇ ದೇಶದ ಸೇನಾಧಿಕಾರಿಗಳು, ಪೊಲೀಸರು ಕಾರ್ಯಾಚರಣೆ ಕೈಗೊಳ್ಳುವಾಗ, ಎನ್‌ಕೌಂಟರ್‌ ನಡೆಸುವಾಗ ತುಂಬ ಎಚ್ಚರಿಕೆಯಿಂದ ಇರುತ್ತಾರೆ. ಉಗ್ರರು, ದುಷ್ಕರ್ಮಿಗಳ ವಿರುದ್ಧ ಕಾರ್ಯಾಚರಣೆ ಕೈಗೊಂಡಾಗ ಸಾರ್ವಜನಿಕರಿಗೆ, ಅಮಾಯಕರಿಗೆ ತೊಂದರೆ ಆಗದಂತೆ ಮುನ್ನೆಚ್ಚರಿಕೆ ವಹಿಸುತ್ತಾರೆ. ಆದರೆ, ಅಮೆರಿಕದಲ್ಲಿ (America) ಪೊಲೀಸ್‌ ಅಧಿಕಾರಿಯು (US Cop) ದುಷ್ಕರ್ಮಿಗಳ ಅಪಾರ್ಟ್‌ಮೆಂಟ್‌ಗೆ ತೆರಳುವ ಬದಲು, ಅಮೆರಿಕ ವಾಯುಪಡೆಯ ಹಿರಿಯ ಅಧಿಕಾರಿಯೊಬ್ಬರ (US Officer) ಫ್ಲ್ಯಾಟ್‌ಗೆ ನುಗ್ಗಿ, ಅವರನ್ನು ಹತ್ಯೆಗೈದಿದ್ದಾರೆ. ವಾಯುಪಡೆ ಅಧಿಕಾರಿಯು ಕಪ್ಪು ವರ್ಣದವರಾದ ಕಾರಣ, ಪ್ರಕರಣವು ಗಂಭೀರ ಸ್ವರೂಪ ಪಡೆದಿದೆ.

ಮೇ 3ರಂದು ಫ್ಲೊರಿಡಾದ ಫೋರ್ಟ್‌ ವ್ಯಾಲ್ಟನ್‌ ಬೀಚ್‌ನಲ್ಲಿರುವ ಶೆಜ್‌ ಎಲನ್‌ ಅಪಾರ್ಟ್‌ಮೆಂಟ್‌ಗೆ ತೆರಳಿದ ಪೊಲೀಸ್‌ ಅಧಿಕಾರಿಯು ತಪ್ಪಾಗಿ ಭಾವಿಸಿ ಅಮೆರಿಕ ವಾಯುಪಡೆಯ ಅಧಿಕಾರಿ, ಕಪ್ಪು ವರ್ಣದವರಾದ ರೋಜರ್‌ ಫೋರ್ಟ್‌ಸನ್‌ ಎಂಬುವರನ್ನು ಗುಂಡಿಕ್ಕಿ ಹತ್ಯೆ ಮಾಡಿದ್ದಾರೆ. ಪೊಲೀಸ್‌ ಅಧಿಕಾರಿಯು ಬೇರೊಂದು ಅಪಾರ್ಟ್‌ಮೆಂಟ್‌ಗೆ ತೆರಳಿ, ಹಿಂದೆ-ಮುಂದೆ ನೋಡದೆ ಶೂಟ್‌ ಮಾಡಿದ ಕಾರಣ ಕಪ್ಪು ವರ್ಣೀಯ ಅಧಿಕಾರಿಯಾಗಿದ್ದಾರೆ. ಇದಕ್ಕೆ ಅಮೆರಿಕದಲ್ಲಿರುವ ಕಪ್ಪು ವರ್ಣದ ಸಮುದಾಯದವರು (ಆಫ್ರಿಕಾ ಮೂಲದ ಅಮೆರಿಕದವರು) ಆಕ್ರೋಶ ವ್ಯಕ್ತಪಡಿಸಿದ್ದಾರೆ.

ಪೊಲೀಸ್‌ ಅಧಿಕಾರಿ ದಾಳಿ ಮಾಡಿದ್ದೇಕೆ?

ಮೇ 3ರಂದು ಪೊಲೀಸರಿಗೆ ಮಹಿಳೆಯೊಬ್ಬರು ಕರೆ ಮಾಡಿದ್ದಾರೆ. ಪಕ್ಕದ ಫ್ಲ್ಯಾಟ್‌ನಲ್ಲಿ ಗಂಡ-ಹೆಂಡತಿ ಜಗಳವಾಡುತ್ತಿದ್ದಾರೆ. ಇಲ್ಲಿ ದೊಡ್ಡ ಗಲಾಟೆ ನಡೆದಿದ್ದು, ಅಕ್ಕ-ಪಕ್ಕದ ಫ್ಲ್ಯಾಟ್‌ನವರಿಗೆ ತೊಂದರೆಯಾಗುತ್ತಿದೆ ಎಂಬುದಾಗಿ ಪೊಲೀಸರಿಗೆ ಮಹಿಳೆ ತಿಳಿಸಿದ್ದಾರೆ. ಇದಾದ ಬಳಿಕ, ಪೊಲೀಸ್‌ ಅಧಿಕಾರಿಯೂ ಕೂಡಲೇ ಅಪಾರ್ಟ್‌ಮೆಂಟ್‌ಗೆ ತೆರಳಿದ್ದಾರೆ. ಆದರೆ, ಮಹಿಳೆ ಕರೆ ಮಾಡಿ ತಿಳಿಸಿದ್ದೇ ಬೇರೆ, ಪೊಲೀಸ್‌ ಅಧಿಕಾರಿ ತೆರಳಿದ ಅಪಾರ್ಟ್‌ಮೆಂಟೇ ಬೇರೆಯಾದ ಕಾರಣ ಅಚಾತುರ್ಯ ಸಂಭವಿಸಿದೆ. ಪೊಲೀಸ್‌ ಅಧಿಕಾರಿಯ ಬಾಡಿ ಕ್ಯಾಮೆರಾದಲ್ಲಿ ಇಡೀ ಘಟನೆಯ ದೃಶ್ಯಗಳು ಸೆರೆಯಾಗಿದ್ದು, ವಾಯುಪಡೆ ಅಧಿಕಾರಿಯ ದುರಂತ ಸಾವಿನ ವಿಡಿಯೊ ವೈರಲ್‌ ಆಗಿದೆ.

ವಾಯುಪಡೆ ಅಧಿಕಾರಿ ಇದ್ದ ಫ್ಲ್ಯಾಟ್‌ಗೆ ನುಗ್ಗಿದ ಪೊಲೀಸ್‌ ಅಧಿಕಾರಿಯು ಪದೇಪದೆ ಬಾಗಿಲು ಬಡಿದಿದ್ದಾರೆ. ರೋಜರ್‌ ಫೋರ್ಟ್‌ಸನ್‌ ಅವರು ಬಾಗಿಲು ತೆಗೆಯುವುದು ತುಸು ವಿಳಂಬವಾಗಿದೆ. ಇದೇ ಕೋಪದಲ್ಲಿದ್ದ ಪೊಲೀಸ್‌ ಅಧಿಕಾರಿಯು, ಫೋರ್ಟ್‌ಸನ್‌ ಬಾಗಿಲು ತೆಗೆಯುತ್ತಲೇ ಹಿಂದೆ-ಮುಂದೆ ನೋಡದೆ ಗುಂಡಿನ ದಾಳಿ ನಡೆಸಿದ್ದಾರೆ. ಸತತ ಆರು ಗುಂಡು ಹಾರಿಸಿದ ಕಾರಣ ರೋಜರ್‌ ಫೋರ್ಟ್‌ಸನ್‌ ಅಲ್ಲಿಯೇ ಕೆಳಗೆ ಬಿದ್ದು ಮೃತಪಟ್ಟಿದ್ದಾರೆ. ಪ್ರಕರಣದ ಕುರಿತು ರೋಜರ್‌ ಫೋರ್ಟ್‌ಸನ್‌ ಕುಟುಂಬಸ್ಥರು ಆಕ್ರೋಶ ವ್ಯಕ್ತಪಡಿಸಿದ್ದು, ಕಪ್ಪು ವರ್ಣೀಯರ ಮೇಲೆ ಪೊಲೀಸರ ದೌರ್ಜನ್ಯದ ಕುರಿತು ತನಿಖೆಯಾಗಬೇಕು ಎಂಬುದಾಗಿ ಆಗ್ರಹಿಸಿದ್ದಾರೆ.

ಇದನ್ನೂ ಓದಿ: ವಿಸ್ತಾರ ಸಂಪಾದಕೀಯ: ಕಾಂಗ್ರೆಸ್ ನಾಯಕನ ‘ವರ್ಣ ವ್ಯಾಖ್ಯಾನ’ ಅವಿವೇಕತನದ್ದು

Continue Reading

ದೇಶ

ಪಿತ್ರೋಡಾ ‘ಸಂಪತ್ತು ಹಂಚಿಕೆ’ ಹೇಳಿಕೆ, ಮಣಿಶಂಕರ್‌ ಅಯ್ಯರ್‌ ಪಾಕ್‌ ಪ್ರೇಮ; ಕಾಂಗ್ರೆಸ್‌ಗೆ ಈಗ ತೀವ್ರ ಫಜೀತಿ!

ಸಂಪತ್ತಿನ ಹಂಚಿಕೆ ಕುರಿತು ಭಾರತೀಯ ಸಾಗರೋತ್ತರ ಕಾಂಗ್ರೆಸ್‌ ಮಾಜಿ ಅಧ್ಯಕ್ಷ ಸ್ಯಾಮ್‌ ಪಿತ್ರೋಡಾ, ಪಾಕಿಸ್ತಾನದ ಕುರಿತು ಪಕ್ಷದ ನಾಯಕ ಮಣಿಶಂಕರ್‌ ಅಯ್ಯರ್‌ ಅವರು ನೀಡಿರುವ ಹೇಳಿಕೆಗಳು ಕಾಂಗ್ರೆಸ್‌ಗೆ ಭಾರಿ ಮುಜುಗರ ತಂದಿವೆ. ಇಬ್ಬರೂ ನಾಯಕರ ವಿರುದ್ಧ ಸಾರ್ವಜನಿಕವಾಗಿಯೂ ಆಕ್ರೋಶ ವ್ಯಕ್ತವಾಗುತ್ತದೆ. ಹಾಗಾಗಿ, ಕಾಂಗ್ರೆಸ್‌ ಪಕ್ಷವು ಇಬ್ಬರ ಹೇಳಿಕೆಗಳಿಂದಲೂ ಅಂತರ ಕಾಪಾಡಿಕೊಳ್ಳುವ ಮೂಲಕ ಮುಜುಗರದಿಂದ ತಪ್ಪಿಸಿಕೊಳ್ಳಲು ಯತ್ನಿಸುತ್ತಿದೆ.

VISTARANEWS.COM


on

Sam Pitroda
Koo

ನವದೆಹಲಿ: ಲೋಕಸಭೆ ಚುನಾವಣೆ (Lok Sabha Election 2024) ಹಿನ್ನೆಲೆಯಲ್ಲಿ ಪ್ರಧಾನಿ ನರೇಂದ್ರ ಮೋದಿ (Narendra Modi) ಹಿಡಿದು, ಸ್ಥಳೀಯ ಪಕ್ಷದ ನಾಯಕನವರೆಗೆ ಭಾಷಣಗಳು, ಹೇಳಿಕೆಗಳು, ಆರೋಪ, ಟೀಕೆ, ವ್ಯಂಗ್ಯಗಳು ಮೊನಚಾಗಿವೆ. ಆದರೆ, ಕಾಂಗ್ರೆಸ್‌ನ ಕೆಲ ನಾಯಕರು ನೀಡುತ್ತಿರುವ ಹೇಳಿಕೆಗಳು ಆ ಪಕ್ಷಕ್ಕೇ ಮುಳುವಾಗುತ್ತಿವೆ. ಸಂಪತ್ತಿನ ಹಂಚಿಕೆ ಕುರಿತು ಭಾರತೀಯ ಸಾಗರೋತ್ತರ ಕಾಂಗ್ರೆಸ್‌ ಮಾಜಿ ಅಧ್ಯಕ್ಷ ಸ್ಯಾಮ್‌ ಪಿತ್ರೋಡಾ, ಪಾಕಿಸ್ತಾನದ ಕುರಿತು ಪಕ್ಷದ ನಾಯಕ ಮಣಿಶಂಕರ್‌ ಅಯ್ಯರ್‌ (Mani Shankar Aiyar) ಅವರು ನೀಡಿರುವ ಹೇಳಿಕೆಗಳು ಕಾಂಗ್ರೆಸ್‌ಗೆ ಭಾರಿ ಮುಜುಗರ ತಂದಿವೆ. ಇದೇ ಕಾರಣಕ್ಕಾಗಿ, ಇಬ್ಬರೂ ನಾಯಕರ ಹೇಳಿಕೆಗಳಿಂದ ಕಾಂಗ್ರೆಸ್‌ ಅಂತರ ಕಾಪಾಡಿಕೊಂಡಿದೆ.

ಸ್ಯಾಮ್‌ ಪಿತ್ರೋಡಾ ಅವಾಂತರಗಳು

“ಕಾಂಗ್ರೆಸ್‌ ಅಧಿಕಾರಕ್ಕೆ ಬಂದರೆ ದೇಶದ ಜನರ ಸಂಪತ್ತನ್ನು ಕಸಿದು, ಹಂಚಿಕೆ ಮಾಡುತ್ತದೆ. ಮಹಿಳೆಯರ ಮಂಗಳಸೂತ್ರಕ್ಕೆ ಕೈ ಹಾಕುತ್ತದೆ” ಎಂಬುದಾಗಿ ನರೇಂದ್ರ ಮೋದಿ ಆರೋಪಿಸಿದ್ದರು. ಇದಕ್ಕೆ ಪ್ರತಿಕ್ರಿಯಿಸುವ ಭರದಲ್ಲಿ, ಸ್ಯಾಮ್‌ ಪಿತ್ರೋಡಾ ಅವರು ಅಮೆರಿಕದ ಉದಾಹರಣೆ ಕೊಟ್ಟರು. “ಅಮೆರಿಕದಲ್ಲಿ ಪಿತ್ರಾರ್ಜಿತ ತೆರಿಗೆ ಇದೆ. ಅಪ್ಪನ ಆಸ್ತಿಯಲ್ಲಿ ಶೇ.55ರಷ್ಟು ಆಸ್ತಿಯನ್ನು ಸರ್ಕಾರಕ್ಕೆ ಕೊಡಬೇಕು” ಎಂಬುದಾಗಿ ಹೇಳಿದ್ದು ವಿವಾದಕ್ಕೆ ಕಾರಣವಾಯಿತು.

“ಅಮೆರಿಕದಲ್ಲಿ ಪಿತ್ರಾರ್ಜಿತ ತೆರಿಗೆ ಇದೆ. ಒಬ್ಬನು 100 ಮಿಲಿಯನ್ USD ಮೌಲ್ಯದ ಸಂಪತ್ತನ್ನು ಹೊಂದಿದ್ದರೆ ಅವನು ಸತ್ತಾಗ ಕೇವಲ 45 ಪ್ರತಿಶತವನ್ನು ತನ್ನ ಮಕ್ಕಳಿಗೆ ವರ್ಗಾಯಿಸಬಹುದು. 55 ಪ್ರತಿಶತವನ್ನು ಸರ್ಕಾರವು ಹೊಂದುತ್ತದೆ. ಅದು ಆಸಕ್ತಿದಾಯಕ ಕಾನೂನು. ನಿಮ್ಮ ಪೀಳಿಗೆಯಲ್ಲಿ ನೀವು ಸಂಪತ್ತನ್ನು ಸಂಪಾದಿಸಿದ್ದೀರಿ. ಮತ್ತು ನೀವು ಈಗ ಹೋಗುವಾಗ, ನಿಮ್ಮ ಸಂಪತ್ತನ್ನು ಸಾರ್ವಜನಿಕರಿಗೆ ಬಿಡಬೇಕು. ಎಲ್ಲವನ್ನೂ ಅಲ್ಲ, ಅದರಲ್ಲಿ ಅರ್ಧದಷ್ಟು, ಇದು ನ್ಯಾಯೋಚಿತವಾಗಿದೆ” ಎಂದು ಪಿತ್ರೋಡಾ ಹೇಳಿದ್ದರು. ಇನ್ನು, ಅವರು ದಕ್ಷಿಣ ಭಾರತೀಯರು ಆಫ್ರಿಕಾದವರಂತೆ ಇದ್ದಾರೆ ಎಂದು ವರ್ಣ ಭೇದದ ಹೇಳಿಕೆಗಳಿಂದಾಗಿ ಅವರು ಭಾರತೀಯ ಸಾಗರೋತ್ತರ ಕಾಂಗ್ರೆಸ್‌ ಸ್ಥಾನಕ್ಕೆ ರಾಜೀನಾಮೆ ನೀಡಬೇಕಾಯಿತು.

ಮಣಿಶಂಕರ್‌ ಅಯ್ಯರ್‌ ಪಾಕ್‌ ಪ್ರೇಮ

ಸದಾ ಒಂದಲ್ಲ ಒಂದು ವಿವಾದಾತ್ಮಕ ಹೇಳಿಕೆ ನೀಡುವ ಮೂಲಕ ಸುದ್ದಿಯಲ್ಲಿರುವ ಕಾಂಗ್ರೆಸ್‌ ನಾಯಕ ಮಣಿಶಂಕರ್‌ ಅಯ್ಯರ್‌ ಅವರೀಗ ಪಾಕಿಸ್ತಾನದ ಪರವಾಗಿ ಮಾತನಾಡಿದ್ದಾರೆ. ಪಾಕಿಸ್ತಾನವನ್ನು ನಾವು ಗೌರವಿಸಬೇಕು ಎಂದು ಅವರು ಹೇಳಿರುವುದು ವಿವಾದಕ್ಕೆ ಕಾರಣವಾಗಿದೆ. ಇದೇ ಕಾರಣಕ್ಕಾಗಿ, ಮಣಿಶಂಕರ್‌ ಅಯ್ಯರ್‌ ಅವರ ಹೇಳಿಕೆಯಿಂದ ಕಾಂಗ್ರೆಸ್‌ ಅಂತರ ಕಾಪಾಡಿಕೊಂಡಿದೆ.

“ಪಾಕಿಸ್ತಾನದ ಬಳಿ ಅಣುಬಾಂಬ್‌ಗಳಿವೆ. ಭಾರತ ಕೇವಲ ವಿಶ್ವಗುರು ಎಂದು ಹೇಳುತ್ತಾ ಇದ್ದರೆ ಸಾಲದು ನೆರೆಯ ರಾಷ್ಟ್ರ ಪಾಕಿಸ್ತಾನದ ಜತೆ ಮೊದಲು ಶಾಂತಿಯುತ ಮಾತುಕತೆ ನಡೆಸಬೇಕು. ಯಾವಾಗಲೂ ಕೈಯಲ್ಲಿ ಬಂದೂಕು ಹಿಡಿದು ಸುತ್ತಾಡಿದರೆ ಯಾವ ಕೆಲಸವೂ ಆಗಲ್ಲ, ಯಾವ ಪರಿಹಾರವೂ ಸಿಗಲ್ಲ. ಅದು ಕೇವಲ ಸಮಸ್ಯೆಯನ್ನು ಮತ್ತಷ್ಟು ಹೆಚ್ಚಿಸುತ್ತದೆ ಅಷ್ಟೇ. ಪಾಕಿಸ್ತಾನ ಕೂಡ ಸಾರ್ವಭೌಮ ರಾಷ್ಟ್ರ ಮತ್ತು ಅದಕ್ಕೆ ಅದರದ್ದೇ ಆದ ಗೌರವ ಇದೆ. ಒಂದು ವೇಳೆ ಅಲ್ಲಿ ತಲೆಕೆಟ್ಟ ಮನುಷ್ಯ ಅಧಿಕಾರಕ್ಕೆ ಬಂದರೆ, ಲಾಹೋರ್‌ನಲ್ಲಿ ಅಣುಬಾಂಬ್‌ ಸ್ಫೋಟಿಸಿದರೆ ಅದರ ಪರಿಣಾಮ ನಮ್ಮ ದೇಶದ ಭಾಗವಾಗಿರುವ ಅಮೃತಸರದ ಮೇಲೂ ಆಗುತ್ತದೆ. ಹೀಗಾಗಿ ನಾನು ಅವರನ್ನು ಗೌರವಿಸಲು ಪ್ರಾರಂಭಿಸಿದರೆ ಅವರು ಬಾಂಬ್‌ ಬಗ್ಗೆ ಯೋಚನೆ ಮಾಡುವುದೇ ಇಲ್ಲ” ಎಂದು ಅಯ್ಯರ್‌ ಹೇಳಿದ್ದಾರೆ.

ಇದನ್ನೂ ಓದಿ: Sam Pitroda: ಭಾರತೀಯರ ಬಣ್ಣದ ಕುರಿತು ಮಾತಾಡಿದ ಸ್ಯಾಮ್‌ ಪಿತ್ರೋಡಾ ತಲೆದಂಡ; ಕಾಂಗ್ರೆಸ್‌ ಸ್ಥಾನಕ್ಕೆ ರಾಜೀನಾಮೆ!

Continue Reading

ವಿದೇಶ

Sharia Law: “ಅಮೆರಿಕನ್ನರ ಮೇಲೂ ಷರಿಯಾ ಕಾನೂನು ಹೇರಲಾಗುತ್ತದೆ…”; ಸಂಚಲನ ಮೂಡಿಸಿದ ವೈರಲ್‌ ವಿಡಿಯೋ

Sharia Law: ಮುಂದಿನ ದಿನಗಳಲ್ಲಿ ಷರಿಯಾ ಕಾನೂನನ್ನು ಅಮೆರಿಕನ್ನರ ಮೇಲೆ ಹೇರಲಾಗುವಂತಹ ಸ್ಥಿತಿ ನಿರ್ಮಾಣ ಆಗುತ್ತದೆ ಎಂದು ರಿಪಬ್ಲಿಕ್‌ ಪಕ್ಷದ ಸದಸ್ಯ ಚಿಪ್‌ ರಾಯ್‌ ಕಳವಳ ವ್ಯಕ್ತಪಡಿಸಿದ್ದಾರೆ. ಗಡಿ ಭದ್ರತೆ ಮತ್ತು ವಿದೇಶಿಗರ ನೆಲೆ ಬಗ್ಗೆ ಅಮೆರಿಕ ಸಂಸತ್‌ನಲ್ಲಿ ಪ್ರಸ್ತಾಪಿಸಿದ ರಾಯ್‌, ಷರಿಯಾ ಕಾನೂನುಗಳ ಬಗ್ಗೆ ತಮಗೆ ಕೊಂಚ ಕಳವಳ ಇದ್ದೇ ಇದೆ ಎಂದು ಹೇಳಿದರು.

VISTARANEWS.COM


on

Sharia law
Koo

ಅಮೆರಿಕ: ಇದೇ ಮೊದಲ ಬಾರಿಗೆ ಷರಿಯಾ ಕಾನೂನು(Sharia Law) ಬಗ್ಗೆ ಅಮೆರಿಕ(America)ದಲ್ಲಿ ದನಿ ಎತ್ತಿ ಎದ್ದಿದೆ. ಮುಂದಿನ ದಿನಗಳಲ್ಲಿ ಷರಿಯಾ ಕಾನೂನನ್ನು ಅಮೆರಿಕನ್ನರ ಮೇಲೆ ಹೇರಲಾಗುವಂತಹ ಸ್ಥಿತಿ ನಿರ್ಮಾಣ ಆಗುತ್ತದೆ ಎಂದು ರಿಪಬ್ಲಿಕ್‌ ಪಕ್ಷದ ಸದಸ್ಯ ಚಿಪ್‌ ರಾಯ್‌(Rep. Chip Roy) ಕಳವಳ ವ್ಯಕ್ತಪಡಿಸಿದ್ದಾರೆ. ಗಡಿ ಭದ್ರತೆ ಮತ್ತು ವಿದೇಶಿಗರ ನೆಲೆ ಬಗ್ಗೆ ಅಮೆರಿಕ ಸಂಸತ್‌ನಲ್ಲಿ ಪ್ರಸ್ತಾಪಿಸಿದ ರಾಯ್‌, ಷರಿಯಾ ಕಾನೂನುಗಳ ಬಗ್ಗೆ ತಮಗೆ ಕೊಂಚ ಕಳವಳ ಇದ್ದೇ ಇದೆ ಎಂದು ಹೇಳಿದರು. ಇದೀಗ ಅವರ ಈ ವಿಡಿಯೋ ಪ್ರಪಂಚಾದ್ಯಂತ ಬಹಳ ಸದ್ದು ಮಾಡುತ್ತಿದೆ. ಮತ್ತು ಸಾಮಾಜಿಕ ಜಾಲಾತಾಣಗಳಲ್ಲಿ ಭಾರೀ ವೈರಲ್‌(Viral video) ಆಗುತ್ತಿದೆ.

ರಾಯ್‌ ಹೇಳಿದ್ದೇನು?

ಸಂಸತ್‌ನಲ್ಲಿ ಮಾತನಾಡಿದ ರಾಯ್‌, ಮುಸ್ಲಿಮರ ಪ್ರತ್ಯೇಕ ಕಾನೂನು ಆಗಿರುವ ಷರಿಯಾ ಕಾನೂನು ಬಗ್ಗೆ ಕಳವಳ ವ್ಯಕ್ತಪಡಿಸಿದರು. ಯಾರಾದಾರೂ ಇಂಗ್ಲೆಂಡ್‌ನಲ್ಲಿ ಏನಾಗ್ತಿದೆ ಎಂಬುದನ್ನು ಗಮನಿಸುತ್ತಿದ್ದೀರಾ? ಅಲ್ಲಿ ಬಹುದೊಡ್ಡ ಸಂಖ್ಯೆಯಲ್ಲಿ ಮುಸ್ಲಿಮರು ಬಂದು ನೆಲೆಸಿದ್ದಾರೆ. ಅಲ್ಲಿ ನೆಲೆವೂರಿರುವ ಅವರು ಏನು ಮಾಡುತ್ತಿದ್ದಾರೆ ಗೊತ್ತೇ? ಅಲ್ಲಿ ಇಸ್ರೇಲ್‌ ವಿರುದ್ಧ ಏನಾದರೂ ಘಟನೆಗಳು ನಡೆದಾಗ ಅದನ್ನು ಸಂಭ್ರಮಿಸುತ್ತಾರೆ. ನೂತನವಾಗಿ ಚುನಾಯಿತನಾಗಿರುವ ಅಲ್ಲಿನ ಸಂಸತ್‌ ಸದಸ್ಯ ಮೋತಿನ್‌ ಅಲಿ ಕೂಡ ಅವರಿಗೆ ಬೆಂಬಲ ನೀಡುತ್ತಾರೆ. ಇಂತಹ ಸ್ಥಿತಿ ಅಮೆರಿಕದಲ್ಲೂ ಬರಬಹುದೆಂಬ ಆತಂಕ ನನಗಿದೆ ಎಂದು ಹೇಳಿದರು. ಅಲಿ ತಮ್ಮ ಗೆಲುವಿನ ಬೆನ್ನಲ್ಲೇ ಪ್ಯಾಲೆಸ್ತೀನ್‌ ಧ್ವಜ ಹಿಡಿ ಅಲ್ಲಾಹು ಅಕ್ಬರ್‌ ಎಂಬು ಘೋಷಣೆ ಕೂಗುತ್ತಾ, ಇದು ಗಾಜಾ ಜನರ ಗೆಲವು ಎಂದು ಹೇಳಿದ್ದರು. ಈ ವಿಡಿಯೋ ಬಹಳ ವೈರಲ್‌ ಆಗಿತ್ತು. ಇದಕ್ಕೆ ಪ್ರತಿಕ್ರಿಯಿಸಿದ್ದ ರಾಯ್‌, ಶೀಘ್ರದಲ್ಲೇ ಅಮೆರಿಕಕ್ಕೆ ಇಂತಹ ಸ್ಥಿತಿ ಬರುತ್ತದೆ ಎಂದು ಬರೆದುಕೊಳ್ಳುವ ಮೂಲ ಗಮನ ಸೆಳೆದಿದ್ದರು. ಇದಾದ ಬಳಿಕ ಅಲಿ ಕ್ಷಮೆಯನ್ನೂ ಯಾಚಿಸಿದ್ದರು. ಇದೇ ವಿಚಾರವನ್ನು ಪ್ರಸ್ತಾಪಿಸಿ ರಾಯ್‌ ಸಂಸತ್‌ನಲ್ಲಿ ಕಳವಳ ವ್ಯಕ್ತಪಡಿಸಿದ್ದಾರೆ.

ನಂತರ ಅವರು ಅಮೆರಿಕದಲ್ಲಿ ನೆಲೆಸಿರುವ ವಿದೇಶಿಗರ ಬಗ್ಗೆ ಪ್ರಸ್ತಾಪಿಸಿದ್ದು, ಅತಿ ಹೆಚ್ಚಿನ ಸಂಖ್ಯೆಯಲ್ಲಿ ಅಮೆರಿಕಕ್ಕೆ ವಿದೇಶಿಗರು ವಲಸೆ ಬರುತ್ತಿದ್ದಾರೆ. ವಿದೇಶಿಗರ ಸಂಖ್ಯೆ ದೇಶದಲ್ಲಿ ದಿನೇ ದಿನೇ ಏರಿಕೆ ಆಗುತ್ತಿದೆ. ನಮ್ಮಲ್ಲಿ 51.5 ಮಿಲಿಯನ್‌ ವಿದೇಶಿ ಮೂಲದ ಪ್ರಜೆಗಳಿದ್ದಾರೆ. ಅವರಿಗೆ 20 ರಿಂದ 25 ಮಿಲಿಯನ್‌ ಮಕ್ಕಳಿವೆ. ನಮ್ಮ ಜನಸಂಖ್ಯೆಗಿಂತಲೂ ಅವರ ಜನಸಂಖ್ಯೆ ಶೇ.20ಕ್ಕಿಂತ ಹೆಚ್ಚಿದೆ. ಇದು ಖುಷಿ ವಿಚಾರವೇ? ಎಂದು ಅವರು ಪ್ರಶ್ನಿಸಿದ್ದಾರೆ. ಚಿಪ್‌ ರಾಯ್‌ ಈ ಹೇಳಿಕೆ ಇಡೀ ಪ್ರಪಂಚದ ಗಮನ ಸೆಳೆದಿದ್ದು, ಪರ ವಿರೋಧ ಚರ್ಚೆಗೆ ಗ್ರಾಸವಾಗಿದೆ.

ಇದನ್ನೂ ಓದಿ:Indian Sailors Released: ಭಾರತಕ್ಕೆ ಭಾರೀ ರಾಜತಾಂತ್ರಿಕ ಗೆಲುವು; ಐವರು ಭಾರತೀಯ ನಾವಿಕರು ರಿಲೀಸ್‌

ಯಾರು ಈ ಚಿಪ್‌ ರಾಯ್‌?

ಚಾರ್ಲ್ಸ್ ಯುಜೀನ್ ” ಚಿಪ್ ” ರಾಯ್ ಒಬ್ಬ ಅಮೇರಿಕನ್ ವಕೀಲ ಮತ್ತು ರಾಜಕಾರಣಿಯಾಗಿದ್ದು ಟೆಕ್ಸಾಸ್‌ನ US ಪ್ರತಿನಿಧಿಯಾಗಿ ಸೇವೆ ಸಲ್ಲಿಸುತ್ತಿದ್ದಾರೆ . ರಿಪಬ್ಲಿಕನ್ ಪಕ್ಷದ ಸದಸ್ಯ , ರಾಯ್ ಜನವರಿ 3, 2019 ರಂದು ಅಧಿಕಾರ ವಹಿಸಿಕೊಂಡರು. ಕಾಂಗ್ರೆಸ್‌ಗೆ ಆಯ್ಕೆಯಾಗುವ ಮೊದಲು, ಅವರು ಸೆನೆಟರ್ ಟೆಡ್ ಕ್ರೂಜ್‌ಗೆ ಸಿಬ್ಬಂದಿ ಮುಖ್ಯಸ್ಥರಾಗಿ ಮತ್ತು ಟೆಕ್ಸಾಸ್‌ನ ಮೊದಲ ಸಹಾಯಕ ಅಟಾರ್ನಿ ಜನರಲ್ ಆಗಿ ಸೇವೆ ಸಲ್ಲಿಸಿದರು. ಹೌಸ್ ಫ್ರೀಡಂ ಕಾಕಸ್‌ನ ಸದಸ್ಯ ಮತ್ತು ನೀತಿ ಅಧ್ಯಕ್ಷರಾದ ರಾಯ್ ಅವರನ್ನು ಹೌಸ್ ರಿಪಬ್ಲಿಕನ್ ಕಾನ್ಫರೆನ್ಸ್‌ನ ಬಲಪಂಥೀಯ ಬಣದ ಸದಸ್ಯ ಎಂದು ಪರಿಗಣಿಸಲಾಗಿದೆ .

Continue Reading
Advertisement
Narendra Modi
ದೇಶ4 hours ago

Narendra Modi: ಶಿಂಧೆ, ಅಜಿತ್‌ ಬಣಕ್ಕೆ ನೀವೇ ಸೇರಿಬಿಡಿ; ಠಾಕ್ರೆ, ಶರದ್‌ ಪವಾರ್‌ಗೆ ಮೋದಿ ಸಲಹೆ!

Wonderla Bengaluru
ಕರ್ನಾಟಕ4 hours ago

Wonderla Bengaluru: ತಾಯಂದಿರ ದಿನ ಹಿನ್ನೆಲೆ ವಂಡರ್‌ಲಾದಿಂದ ವಿಶೇಷ ಆಫರ್‌; 2 ಟಿಕೆಟ್‌ ಖರೀದಿಸಿದರೆ ತಾಯಿಗೆ ಫ್ರೀ ಎಂಟ್ರಿ!

IPL 2024
ಕ್ರೀಡೆ4 hours ago

IPL 2024 : ಚೆನ್ನೈ ವಿರುದ್ಧ ಗುಜರಾತ್​ಗೆ 35 ರನ್ ವಿಜಯ, ಆರ್​​ಸಿಬಿ ಪ್ಲೇಆಫ್​ ಪ್ರವೇಶಕ್ಕೆ ಮತ್ತೊಂದು ಸವಾಲು

Court Order
ದೇಶ4 hours ago

Cash Transfers: ಚುನಾವಣೆ; ಸರ್ಕಾರದ 14 ಸಾವಿರ ಕೋಟಿ ರೂ. ಜನರ ಖಾತೆಗೆ ವರ್ಗಾಯಿಸಲು ಕೋರ್ಟ್‌ ತಡೆ!

Prajwal Revanna Case
ಕರ್ನಾಟಕ5 hours ago

Prajwal Revanna Case: 36 ಸೆಕೆಂಡ್‌‌ಗಳ ಮತ್ತೊಂದು ಆಡಿಯೊ ಬಾಂಬ್; ಪ್ರಜ್ವಲ್ ಕೇಸ್‌‌ಗೆ ಟ್ವಿಸ್ಟ್ ಮೇಲೆ ಟ್ವಿಸ್ಟ್!

Mr. & Mrs. Mahi'
ಪ್ರಮುಖ ಸುದ್ದಿ5 hours ago

Mr. & Mrs. Mahi : ಬಾಲಿವುಡ್​ ಬ್ಯೂಟಿ ಜಾಹ್ನವಿ ಕಪೂರ್​ ನಟನೆಯ ಮಿಸ್ಟರ್& ಮಿಸೆಸ್​ ಮಹಿ’ ಬಿಡುಗಡೆ ದಿನಾಂಕ ಪ್ರಕಟ

888 rupees postpaid plan with 15 OTT applications for JioFiber AirFiber customers
ತಂತ್ರಜ್ಞಾನ5 hours ago

Reliance Jio: ಜಿಯೋಫೈಬರ್, ಏರ್ ಫೈಬರ್ ಗ್ರಾಹಕರಿಗೆ ಆಫರ್‌; 15 ಒಟಿಟಿ ಅಪ್ಲಿಕೇಷನ್‌ ಜತೆಗೆ 888 ರೂ. ಪೋಸ್ಟ್ ಪೇಯ್ಡ್ ಪ್ಲಾನ್

Prajwal Revanna case SIT to issue Red Corner Notice against Prajwal
ಕ್ರೈಂ5 hours ago

Prajwal Revanna case: ಪ್ರಜ್ವಲ್‌ ರೇವಣ್ಣ ವಿರುದ್ಧ ರೆಡ್‌ ಕಾರ್ನರ್ ಬ್ರಹ್ಮಾಸ್ತ್ರ; ಯಾವ ದೇಶದಲ್ಲಿದ್ದರೂ ಅರೆಸ್ಟ್‌ ಮಾಡಲು ಸಿದ್ಧತೆ?

IPL 2024
ಕ್ರೀಡೆ6 hours ago

IPL 2024 : ಐಪಿಎಲ್​ನಲ್ಲಿ ಹೊಸ ಇತಿಹಾಸ; ಸಚಿನ್​ ದಾಖಲೆ ಮುರಿದ ಸಾಯಿ ಸುದರ್ಶನ್​

US
ಪ್ರಮುಖ ಸುದ್ದಿ6 hours ago

ಮಹಿಳೆಯ ಕುತ್ತಿಗೆಗೆ ಬೆಲ್ಟ್‌ನಿಂದ ಬಿಗಿದು, ರಸ್ತೆ ಬದಿಯೇ ಅತ್ಯಾಚಾರ ಎಸಗಿದ ದುಷ್ಟ; ಭೀಕರ ವಿಡಿಯೊ ಇಲ್ಲಿದೆ

Sharmitha Gowda in bikini
ಕಿರುತೆರೆ7 months ago

Geetha Serial Kannada: ನಿದ್ದೆ ಕದ್ದ ಚೋರಿ! ನಟಿ `ಭಾನುಮತಿ’ ಹಾಟ್‌ ಪೋಟೊಗಳಿಗೆ ಫ್ಯಾನ್ಸ್ ಫುಲ್ ಫಿದಾ

Kannada Serials
ಕಿರುತೆರೆ7 months ago

Kannada Serials TRP: 2ನೇ ಸ್ಥಾನದಲ್ಲಿ 2 ಧಾರಾವಾಹಿಗಳು; ಟಿಆರ್‌ಪಿ ರೇಸ್‌ನಲ್ಲಿಲ್ಲ ಭಾಗ್ಯಲಕ್ಷ್ಮೀ!

Bigg Boss- Saregamapa 20 average TRP
ಕಿರುತೆರೆ7 months ago

Kannada Serials TRP: ಏಳನೇ ಸ್ಥಾನಕ್ಕೆ ʻಅಮೃತಧಾರೆʼ ಕುಸಿತ; ಬಿಗ್‌ ಬಾಸ್‌-ಸರಿಗಮಪ ಟಿಆರ್‌ಪಿ ಎಷ್ಟು?

galipata neetu
ಕಿರುತೆರೆ5 months ago

Kanyadana Serial: ಕಿರುತೆರೆಗೆ ಮತ್ತೆ ಎಂಟ್ರಿ ಕೊಟ್ಟ ʻಗಾಳಿಪಟʼ ಖ್ಯಾತಿಯ ʻನೀತುʼ!

Kannada Serials
ಕಿರುತೆರೆ8 months ago

Kannada Serials TRP: ನಾಲ್ಕನೇ ಸ್ಥಾನಕ್ಕೆ ಕುಸಿತ ಕಂಡ ʻಸೀತಾ ರಾಮʼ; ಟಿಆರ್‌ಪಿ ರೇಸ್‌ಗೆ ʻಭಾಗ್ಯಲಕ್ಷ್ಮಿʼ ಬ್ಯಾಕ್‌!

Kannada Serials
ಕಿರುತೆರೆ7 months ago

Kannada Serials TRP: ಟಿಆರ್‌ಪಿಯಲ್ಲಿ ʻಭಾಗ್ಯಲಕ್ಷ್ಮೀʼ ಹವಾ; ʻಪುಟ್ಟಕ್ಕನ ಮಕ್ಕಳುʼ ಧಾರಾವಾಹಿಗೆ ಸಂಕಷ್ಟ!

Bigg Boss' dominates TRP; Sita Rama fell to the sixth position
ಕಿರುತೆರೆ7 months ago

Kannada Serials TRP: ಟಿಆರ್‌ಪಿಯಲ್ಲಿ ʻಬಿಗ್ ಬಾಸ್ʼದೇ ಮೇಲುಗೈ; 6ನೇ ಸ್ಥಾನಕ್ಕೆ ಕುಸಿದ ʻಸೀತಾ ರಾಮʼ

geetha serial Dhanush gowda engagement
ಕಿರುತೆರೆ5 months ago

Dhanush Gowda: ಗೀತಾ ಧಾರಾವಾಹಿ ನಟನ ನಿಶ್ಚಿತಾರ್ಥ; ಭವ್ಯಾಳ ಕಮೆಂಟ್‌ ಬಾಕ್ಸ್‌ ಆಫ್‌!

varun
ಕಿರುತೆರೆ6 months ago

Brindavana Serial: ʼಬೃಂದಾವನʼ ಧಾರಾವಾಹಿಯಲ್ಲಿ ದೊಡ್ಡ ಟ್ವಿಸ್ಟ್‌; ಪ್ರಮುಖ ಪಾತ್ರಧಾರಿಯೇ ಬದಲು

Kannada Serials
ಕಿರುತೆರೆ8 months ago

Kannada Serials TRP: ಟಿಆರ್‌ಪಿಯಲ್ಲಿ ಏರಿಕೆ ಕಂಡ ʻಅಮೃತಧಾರೆʼ; ʻಗಟ್ಟಿಮೇಳʼಕ್ಕೆ ನಾಲ್ಕನೇ ಸ್ಥಾನ!

Physical Abuse The public prosecutor called the client woman to the lodge
ಕ್ರೈಂ13 hours ago

Physical Abuse : ಲೈಂಗಿಕ ದೌರ್ಜನ್ಯ; ಕಕ್ಷಿದಾರ ಮಹಿಳೆಯನ್ನು ಮಂಚಕ್ಕೆ ಕರೆದ ಪಬ್ಲಿಕ್ ಪ್ರಾಸಿಕ್ಯೂಟರ್!

murder case kalaburagi
ಕಲಬುರಗಿ15 hours ago

Murder Case : ಕಾಂಗ್ರೆಸ್‌ಗೆ ವೋಟ್‌ ಹಾಕಿದ್ದಕ್ಕೆ ಅಮಾವಾಸ್ಯೆ ದಿನ ಕರೆದು ಕೊಂದರು

Rain Effect In karnataka
ಮಳೆ16 hours ago

Rain Effect : ಬಿರುಗಾಳಿ ರಭಸಕ್ಕೆ ಮನೆಯ ಗೇಟ್ ಬಿದ್ದು ಬಾಲಕಿ ಸಾವು; ಸಿಡಿಲಿಗೆ ಎತ್ತುಗಳು ಬಲಿ

Dina Bhavishya
ಭವಿಷ್ಯ22 hours ago

Dina Bhavishya: ಶುಭ ಶುಕ್ರವಾರ ಈ ರಾಶಿಯವರಿಗೆ ಖುಲಾಯಿಸಲಿದೆ ಲಕ್‌

Prajwal Revanna case Revanna bail plea to be heard on Monday Advocate Nagesh argument was as follows
ಕ್ರೈಂ1 day ago

Prajwal Revanna Case: ರೇವಣ್ಣ ಜಾಮೀನು ಅರ್ಜಿ ಸೋಮವಾರಕ್ಕೆ: ಎಸ್‌ಐಟಿಗೆ ಹಿಗ್ಗಾಮುಗ್ಗಾ ತರಾಟೆ; ವಕೀಲ ನಾಗೇಶ್‌ ವಾದ ಹೀಗಿತ್ತು!

Prajwal Revanna Case Hasanambe is going to destroy this government HD Kumaraswamy curse
ರಾಜಕೀಯ1 day ago

Prajwal Revanna Case: ಈ ಸರ್ಕಾರವನ್ನು ಹಾಸನಾಂಬೆ ಧ್ವಂಸ ಮಾಡಲಿದ್ದಾಳೆ: ಎಚ್‌ಡಿಕೆ ಶಾಪ

Prajwal Revanna Case DK Shivakumar alleged mastermind in 25000 pen drive allotment
ಹಾಸನ1 day ago

Prajwal Revanna Case: 25,000 ಪೆನ್ ಡ್ರೈವ್ ಹಂಚಿಕೆಯಲ್ಲಿ ಡಿ.ಕೆ. ಶಿವಕುಮಾರ್ ಮಾಸ್ಟರ್ ಮೈಂಡ್ ಎಂದು ರಾಜ್ಯಪಾಲರಿಗೆ ದೂರು!

SSLC Result 2024 what is the reason for most of the students fail in SSLC
ಕರ್ನಾಟಕ2 days ago

SSLC Result 2024: ಎಸ್‌ಎಸ್‌ಎಲ್‌ಸಿಯಲ್ಲಿ ಹೆಚ್ಚಿನ ಮಕ್ಕಳು ಫೇಲ್‌ ಆಗಲು ಶಿಕ್ಷಣ ಇಲಾಖೆಯ ಈ ನಿರ್ಧಾರವೇ ಕಾರಣ!

Sslc exam Result 2024
ಶಿಕ್ಷಣ2 days ago

SSLC Result 2024 : ಎಸ್‌ಎಸ್‌ಎಲ್‌ಸಿ ಪರೀಕ್ಷೆಯಲ್ಲಿ ಫೇಲಾದರೂ, ಕಡಿಮೆ ಅಂಕ ಬಂದರೂ ಡೋಂಟ್‌ ವರಿ; ಇನ್ನೂ ಇದೆ ಎರಡು ಚಾನ್ಸ್‌!

SSLC Result 2024 secret behind 20 percent grace marks
ಕರ್ನಾಟಕ2 days ago

SSLC Result 2024: ಎಸ್‌ಎಸ್‌ಎಲ್‌ಸಿಯಲ್ಲಿ ಈ ಬಾರಿ ನೂರಕ್ಕೆ 25 ಅಂಕ ಪಡೆದವರೂ ಪಾಸ್! ಶೇ. 20 ಗ್ರೇಸ್ ಮಾರ್ಕ್ಸ್ ಕೊಟ್ಟಿದ್ದರ ಹಿಂದಿದೆ ಇಂಟರೆಸ್ಟಿಂಗ್ ಕತೆ!

ಟ್ರೆಂಡಿಂಗ್‌