Anant Ambani: ಅನಂತ್‌ ಅಂಬಾನಿ ವಾಚ್‌ ನೋಡಿ ದಂಗಾದ ಜುಕರ್‌ಬರ್ಗ್;‌ ಬೆಲೆ ಎಷ್ಟು ಕೋಟಿ? - Vistara News

ದೇಶ

Anant Ambani: ಅನಂತ್‌ ಅಂಬಾನಿ ವಾಚ್‌ ನೋಡಿ ದಂಗಾದ ಜುಕರ್‌ಬರ್ಗ್;‌ ಬೆಲೆ ಎಷ್ಟು ಕೋಟಿ?

Anant Ambani: ಅನಂತ್‌ ಅಂಬಾನಿ ಹಾಗೂ ರಾಧಿಕಾ ಮರ್ಚಂಟ್‌ ಅವರ ವಿವಾಹಪೂರ್ವ ಕಾರ್ಯಕ್ರಮದಲ್ಲಿ ಮೆಟಾ ಸಿಇಒ ಮಾರ್ಕ್‌ ಜುಕರ್‌ಬರ್ಗ್‌ ಹಾಗೂ ಪ್ರಿಸಿಲ್ಲಾ ಚಾನ್‌ ಅವರು ಕೂಡ ಭಾಗಿಯಾಗಿದ್ದರು. ಇದೇ ವೇಳೆ, ಜುಕರ್‌ಬರ್ಗ್‌ ದಂಪತಿಯು ಅನಂತ್‌ ಅಂಬಾನಿ ವಾಚ್‌ ನೋಡಿ ದಂಗಾಗಿದ್ದರು.

VISTARANEWS.COM


on

Anant Ambani Watch
ಮಹತ್ವದ, ಕುತೂಹಲಕರ ಸುದ್ದಿಗಾಗಿ ಫಾಲೊ ಮಾಡಿ
Koo

ಜಾಮ್‌ನಗರ: ಗುಜರಾತ್‌ನ ಜಾಮ್‌ನಗರದಲ್ಲಿ ರಿಲಯನ್ಸ್‌ ಇಂಡಸ್ಟ್ರೀಸ್‌ ಮುಖ್ಯಸ್ಥ ಮುಕೇಶ್‌ ಅಂಬಾನಿ (Mukesh Ambani) ಪುತ್ರ ಅನಂತ್‌ ಅಂಬಾನಿ (Anant Ambani) ಹಾಗೂ ಉದ್ಯಮಿ ವಿರೇನ್‌ ಮರ್ಚಂಟ್‌ ಪುತ್ರಿ ರಾಧಿಕಾ ಮರ್ಚಂಟ್‌ (Radhika Merchant) ಅವರ ವಿವಾಹಪೂರ್ವ ಕಾರ್ಯಕ್ರಮವು ಅದ್ಧೂರಿಯಾಗಿ ನಡೆದಿದೆ. ದೇಶ-ವಿದೇಶಗಳ ಗಣ್ಯರ ಉಪಸ್ಥಿತಿ, ಬಾಲಿವುಡ್‌ ನಟ-ನಟಿಯರ ಹಾಡು, ನೃತ್ಯ, ಮೋಜು-ಮಸ್ತಿಯ ಮಧ್ಯೆ ಹೊಸ ಪಯಣಕ್ಕೆ ಅನಂತ್‌ ಹಾಗೂ ರಾಧಿಕಾ ಮುಂದಡಿ ಇಟ್ಟಿದ್ದಾರೆ. ಇನ್ನು, ಪ್ರಿ ವೆಡ್ಡಿಂಗ್‌ ಕಾರ್ಯಕ್ರಮದಲ್ಲಿ ಮೆಟಾ ಸಿಇಒ ಮಾರ್ಕ್‌ ಜುಕರ್‌ಬರ್ಗ್‌ (Mark Zuckerberg) ಹಾಗೂ ಅವರ ಪತ್ನಿ ಪ್ರಿಸಿಲ್ಲಾ ಚಾನ್‌ ಅವರು ಭಾಗವಹಿಸಿದ್ದು, ಅನಂತ್‌ ಅಂಬಾನಿ ಕಟ್ಟಿದ್ದ ಗಡಿಯಾರ ನೋಡಿ ಇಬ್ಬರೂ ದಂಗಾಗಿದ್ದಾರೆ. ಈ ವಿಡಿಯೊ ವೈರಲ್‌ ಆಗುವ ಜತೆಗೆ ಅನಂತ್‌ ಅಂಬಾನಿ ವಾಚ್‌ ಬೆಲೆ ಕುರಿತು ಭಾರಿ ಚರ್ಚೆ ಶುರುವಾಗಿವೆ.

ಹೌದು, ಮಾರ್ಚ್‌ 1ರಿಂದ 3ರವರೆಗೆ ಜಾಮ್‌ನಗರದಲ್ಲಿ ಅದ್ಧೂರಿ ಪ್ರಿವೆಡ್ಡಿಂಗ್‌ ಕಾರ್ಯಕ್ರಮ ನಡೆದಿದೆ. ಇದೇ ವೇಳೆ, ಮಾರ್ಕ್‌ ಜುಕರ್‌ಬರ್ಗ್‌ ಹಾಗೂ ಪ್ರಿಸಿಲ್ಲಾ ಚಾನ್‌ ಜತೆ ಅನಂತ್‌ ಅಂಬಾನಿ ಮಾತನಾಡುತ್ತಿದ್ದರು. ಇದೇ ವೇಳೆ, ಪ್ರಿಸಿಲ್ಲಾ ಚಾನ್‌ ಅವರು ಅನಂತ್‌ ಅಂಬಾನಿ ಕೈಯಲ್ಲಿದ್ದ ವಾಚ್‌ ನೋಡಿ ದಂಗಾದರು. ಇದಾದ ಬಳಿಕ, ಮಾರ್ಕ್‌ ಜುಕರ್‌ಬರ್ಗ್‌ ಅವರು ಕೂಡ ಅಂಬಾನಿ ಪುತ್ರನ ವಾಚ್‌ ನೋಡಿ ಅಚ್ಚರಿಪಟ್ಟರು. ವಾಚ್‌ಅನ್ನು ನೋಡಿ, ಅದನ್ನು ಮುಟ್ಟಿ, ಅದರ ಕುರಿತ ಮಾಹಿತಿ ಪಡೆದರು.

ಯಾವುದದು ವಾಚ್? ಬೆಲೆ ಎಷ್ಟು?

ಅನಂತ್‌ ಅಂಬಾನಿ ಅವರು ಪ್ರಿ ವೆಡ್ಡಿಂಗ್‌ ಕಾರ್ಯಕ್ರಮದಲ್ಲಿ ಸ್ವಿಟ್ಜರ್‌ಲ್ಯಾಂಡ್‌ನ ಖ್ಯಾತ ಗಡಿಯಾರ ತಯಾರಿಕಾ ಕಂಪನಿಯ ರಿಚರ್ಡ್‌ ಮಿಲ್ಲೆ ವಾಚ್‌ ಧರಿಸಿದ್ದರು. ಇದರ ಬೆಲೆಯು ಸುಮಾರು 45 ಕೋಟಿ ರೂ. ಎಂಬುದಾಗಿ ಅಂದಾಜಿಸಲಾಗಿದೆ. ರಿಚರ್ಡ್‌ ಮಿಲ್ಲೆ ಸರಣಿಯ ವಾಚ್‌ಗಳ ಬೆಲೆಯು ಕೋಟಿ ರೂ. ಲೆಕ್ಕದಲ್ಲಿಯೇ ಇವೆ. ಹಾಗಾಗಿ, ಈ ವಾಚ್‌ ಬೆಲೆ, ಅನಂತ್‌ ಅಂಬಾನಿ ಸಿರಿವಂತಿಕೆ ಸೇರಿ ಹಲವು ವಿಷಯಗಳ ಕುರಿತು ಸಾಮಾಜಿಕ ಜಾಲತಾಣಗಳಲ್ಲಿ ಚರ್ಚೆ ನಡೆಯುತ್ತಿವೆ. ಟ್ರೋಲ್‌ ವಿಡಿಯೊಗಳನ್ನು ಕೂಡ ಅಪ್‌ಲೋಡ್‌ ಮಾಡಲಾಗಿದೆ.

ಇದನ್ನೂ ಓದಿ: Nita Ambani: ಅನಂತ್ ಅಂಬಾನಿ ಮದುವೆ: ವಿಶ್ವಂಭರಿ ಸ್ತುತಿಗೆ ನೀತಾ ಅಂಬಾನಿ ಅದ್ಭುತ ನೃತ್ಯ!

ಮುಕೇಶ್‌ ಅಂಬಾನಿ ಅವರು ಮಗನ ಪ್ರಿ ವೆಡ್ಡಿಂಗ್‌ ಕಾರ್ಯಕ್ರಮಕ್ಕೆ ಸುಮಾರು 1 ಸಾವಿರ ಕೋಟಿ ರೂ. ವ್ಯಯಿಸಿದ್ದಾರೆ ಎಂದು ತಿಳಿದುಬಂದಿದೆ. ಖ್ಯಾತ ಪಾಪ್‌ ಗಾಯಕಿ ರಿಹಾನಾ, ಸಚಿನ್‌ ತೆಂಡೂಲ್ಕರ್‌, ಮಹೇಂದ್ರ ಸಿಂಗ್‌ ಧೋನಿ ಕುಟುಂಬಸ್ಥರು, ಸಲ್ಮಾನ್‌ ಖಾನ್‌, ಶಾರುಖ್‌ ಖಾನ್‌, ಆಮೀರ್‌ ಖಾನ್‌, ರಣವೀರ್‌ ಸಿಂಗ್‌, ದೀಪಿಕಾ ಪಡುಕೋಣೆ, ಗೌತಮ್‌ ಅದಾನಿ, ಆಲಿಯಾ ಭಟ್‌, ರಣಬೀರ್‌ ಕಪೂರ್‌, ಬಿಲ್‌ ಗೇಟ್ಸ್‌ ಸೇರಿ ದೇಶ-ವಿದೇಶಗಳ ನೂರಾರು ಗಣ್ಯರು ಕಾರ್ಯಕ್ರಮದಲ್ಲಿ ಪಾಲ್ಗೊಂಡಿದ್ದರು. ಜುಲೈ 12ರಂದು ಮುಂಬೈನಲ್ಲಿ ಅನಂತ್‌ ಅಂಬಾನಿ ಹಾಗೂ ರಾಧಿಕಾ ಮರ್ಚಂಟ್‌ ವೈವಾಹಿಕ ಜೀವನಕ್ಕೆ ಕಾಲಿಡಲಿದ್ದಾರೆ.

ಈ ಸಂಗತಿಯ ಕುರಿತು ನಿಮ್ಮ ಅನಿಸಿಕೆ ಏನು? ಕಾಮೆಂಟ್ ಮೂಲಕ ತಿಳಿಸಿ

ಕ್ಷಣ ಕ್ಷಣದ ಮಾಹಿತಿಗಾಗಿ Vistara News FaceBook ಪೇಜ್ ಫಾಲೋ ಮಾಡಿ
ಮಹತ್ವದ ಮಾಹಿತಿಗಾಗಿ ವಿಸ್ತಾರ ನ್ಯೂಸ್ ಆ್ಯಪ್ ಉಚಿತವಾಗಿ ಡೌನ್ ಲೋಡ್ ಮಾಡಿಕೊಳ್ಳಿ: Andriod App | IOS App
Continue Reading
Click to comment

Leave a Reply

Your email address will not be published. Required fields are marked *

Lok Sabha Election 2024

Indresh Kumar: ರಾಮ ಭಕ್ತರು ಅಧಿಕಾರದಲ್ಲಿದ್ದಾರೆ, ರಾಮ ವಿರೋಧಿಗಳು ಸೋತಿದ್ದಾರೆ; ಆರ್‌ಎಸ್‌ಎಸ್‌ ನಾಯಕನ ಹೊಸ ಹೇಳಿಕೆ

ಜೈಪುರದ ಕಾರ್ಯಕ್ರಮವೊಂದರಲ್ಲಿ ಆರ್‌ಎಸ್‌ಎಸ್‌ ಹಿರಿಯ ನಾಯಕ ಇಂದ್ರೇಶ್‌ ಕುಮಾರ್‌ ಅವರು, ಬಿಜೆಪಿಯ ದುರಹಂಕಾರದಿಂದ ಅದಕ್ಕೆ 240 ಸ್ಥಾನಗಳು ಸಿಕ್ಕಿತು ಎಂದು (Indresh Kumar) ಹೇಳಿದ್ದು ಚರ್ಚೆಗೆ ಕಾರಣವಾಗಿತ್ತು. ಇದು ಆರ್ ಎಸ್ ಎಸ್ ಮತ್ತು ಬಿಜೆಪಿ ನಡುವಿನ ಭಿನ್ನಮತದ ಬಗ್ಗೆ ವದಂತಿಗಳನ್ನು ಹುಟ್ಟು ಹಾಕಿತ್ತು. ಇದೀಗ ಇಂದ್ರೇಶ್ ಅವರು ಹೊಸ ಹೇಳಿಕೆ ನೀಡಿದ್ದಾರೆ.

VISTARANEWS.COM


on

By

Indresh Kumar
Koo

ರಾಮನನ್ನು (ram) ವಿರೋಧಿಸಿದವರು ಅಧಿಕಾರದಿಂದ ಹೊರಗೆ ಉಳಿದಿದ್ದಾರೆ. ರಾಮ ಭಕ್ತಿ ಪ್ರತಿಜ್ಞೆ ಮಾಡಿದವರು ಅಧಿಕಾರದಲ್ಲಿದ್ದಾರೆ. ನರೇಂದ್ರ ಮೋದಿ (narendra modi) ನೇತೃತ್ವದಲ್ಲಿ ಮೂರನೇ ಬಾರಿಗೆ ಸರ್ಕಾರ ರಚನೆಯಾಗಿದೆ ಎಂದು ಆರ್ ಎಸ್ ಎಸ್ ನಾಯಕ (RSS Leader) ಇಂದ್ರೇಶ್ ಕುಮಾರ್ (Indresh Kumar) ಹೇಳಿದ್ದಾರೆ. ಬಿಜೆಪಿಯ ದುರಂಹಕಾರ (BJP’s Arrogance) ಕುರಿತು ಇವರು ಈ ಹಿಂದೆ ನೀಡಿದ ಹೇಳಿಕೆ ಭಾರಿ ಚರ್ಚೆಗೆ ಒಳಗಾಗಿತ್ತು. ಇವರ ಹೇಳಿಕೆ ಮೋದಿ ವಿರುದ್ಧ ಮತ್ತು ಬಿಜೆಪಿ ವಿರುದ್ಧ ಎಂಬ ವ್ಯಾಖ್ಯಾನ ಕೇಳಿ ಬಂದಿತ್ತು. ಇದೀಗ ಇಂದ್ರೇಶ್‌ ಕುಮಾರ್‌ ಯುಟರ್ನ್‌ ಹೊಡೆದಿದ್ದಾರೆ. ಮೋದಿ ಮತ್ತು ಬಿಜೆಪಿ ಪರ ಹೇಳಿಕೆ ನೀಡಿದ್ದಾರೆ.

ಇತ್ತೀಚಿನ ಲೋಕಸಭೆ ಚುನಾವಣೆಯಲ್ಲಿ ಭಾರತೀಯ ಜನತಾ ಪಕ್ಷವು (ಬಿಜೆಪಿ) 240 ಸ್ಥಾನಗಳಿಗೆ ಸೀಮಿತವಾಗಿದೆ. ಬಿಜೆಪಿ ನಾಯಕರ “ಅಹಂಕಾರ”ದಿಂದ ಪಕ್ಷವು ಬಹುಮತದ ಅಂಕವನ್ನು ಕಳೆದುಕೊಂಡಿದೆ ಎಂದು ಅವರು ಹೇಳಿದ್ದು ಸಂಚಲನ ಸೃಷ್ಟಿಸಿತ್ತು.

ಲೋಕಸಭೆ ಸ್ಥಾನಗಳಲ್ಲಿ 240 ಸ್ಥಾನಗಳನ್ನು ಪಡೆದ ನರೇಂದ್ರ ಮೋದಿ ನೇತೃತ್ವದ ಬಿಜೆಪಿಯ ಕುರಿತು ಜೈಪುರ ಬಳಿಯ ಕನೋಟಾದಲ್ಲಿ ಗುರುವಾರ ನಡೆದ ‘ರಾಮರಥ ಅಯೋಧ್ಯೆ ಯಾತ್ರಾ ದರ್ಶನ ಪೂಜಾ ಸಮಾರೋಹ್’ ಕಾರ್ಯಕ್ರಮದಲ್ಲಿ ಮಾತನಾಡಿದ ಅವರು, ರಾಮನ ಭಕ್ತಿ ಮಾಡಿದ ಸೊಕ್ಕಿನ ಪಕ್ಷವನ್ನು 241ಕ್ಕೆ ನಿಲ್ಲಿಸಲಾಯಿತು. ಆದರೆ ಅದುವೇ ಅತಿದೊಡ್ಡ ಪಕ್ಷವಾಯಿತು ಎಂದು ಟೀಕಿಸಿದ್ದರು.


ಅಹಿಂಸೆ ಮತ್ತು ಸತ್ಯದ ತತ್ವಗಳನ್ನು ಉಲ್ಲೇಖಿಸಿ ಆರೆಸ್ಸೆಸ್ ಮುಖ್ಯಸ್ಥ ಮೋಹನ್ ಭಾಗವತ್ ಎಲ್ಲರ ಬಗ್ಗೆ ವಿನಮ್ರತೆ ಮತ್ತು ಸದ್ಭಾವನೆಯ ಅಗತ್ಯವನ್ನು ಒತ್ತಿ ಹೇಳಿದ್ದರು ಹಾಗೂ ನಿಜವಾದ ‘ಸೇವಕ’ ಅಹಂಕಾರವಿಲ್ಲದೆ ಜನರ ಸೇವೆ ಮಾಡಬೇಕು ಮತ್ತು ಘನತೆಯನ್ನು ಕಾಪಾಡಿಕೊಳ್ಳಬೇಕು ಎಂದು ಹೇಳಿದ್ದರು.

ಇದನ್ನೂ ಓದಿ: Lok Sabha Election : ಅಹಂಕಾರ ತೋರಿಸಿದ್ದಕ್ಕೆ ರಾಮನೇ 241 ಸ್ಥಾನಕ್ಕೆ ನಿಲ್ಲಿಸಿದ; ಪರೋಕ್ಷ ಟಾಂಗ್​ ಕೊಟ್ಟ ಆರ್​ಎಸ್​ಎಸ್​​ ಸಿದ್ಧಾಂತವಾದಿ

ಇದು ಆರ್‌ಎಸ್‌ಎಸ್ ಮತ್ತು ಬಿಜೆಪಿಯೊಂದಿಗಿನ ಭಿನ್ನಾಭಿಪ್ರಾಯವನ್ನು ಎತ್ತಿ ಹಿಡಿದು ವಿವಾದವನ್ನು ಹುಟ್ಟು ಹಾಕಿತ್ತು. ಇಂತಹ ಹೇಳಿಕೆಗಳು ಗೊಂದಲವನ್ನು ಬಿತ್ತುವ ಉದ್ದೇಶದಿಂದ ಮಾಡಲಾಗಿದೆ. ಇದು ಕೇವಲ ಊಹಾಪೋಹ ಎಂದು ಆರ್ ಎಸ್ ಎಸ್ ಸ್ಪಷ್ಟಪಡಿಸಿದೆ.

Continue Reading

ಪ್ರಮುಖ ಸುದ್ದಿ

G7 Summit : ನಿಮ್ಮ ಭೇಟಿಯಿಂದ ಸಂತೋಷವಾಗಿದೆ; ಅಮೆರಿಕ ಅಧ್ಯಕ್ಷ ಬೈಡೆನ್​ ಭೇಟಿ ಬಗ್ಗೆ ಮೋದಿ ಉತ್ಸಾಹ

G7 Summit : ಪ್ರಧಾನಿ ಮೋದಿ ಅವರು ಫ್ರೆಂಚ್ ಅಧ್ಯಕ್ಷ ಎಮ್ಯಾನುಯೆಲ್ ಮ್ಯಾಕ್ರೋನ್ ಅವರೊಂದಿಗೆ ಉಭಯ ದೇಶಗಳ ನಡುವಿನ ಕಾರ್ಯತಂತ್ರದ ಪಾಲುದಾರಿಕೆಯ ಪ್ರಮುಖ ಅಂಶಗಳ ಬಗ್ಗೆ ಚರ್ಚೆಯಲ್ಲಿ ತೊಡಗಿದ್ದರು. ಅಧ್ಯಕ್ಷ ಮ್ಯಾಕ್ರನ್ ಅವರು ದ್ವಿಪಕ್ಷೀಯ ಸಂಬಂಧಗಳ ಬಗ್ಗೆ ಉತ್ಸಾಹ ವ್ಯಕ್ತಪಡಿಸಿದ್ದಾರೆ. ಇಂಧನ, ರಕ್ಷಣೆ, ಸಂಶೋಧನೆ ಮತ್ತು ಸಂಸ್ಕೃತಿ ಸೇರಿದಂತೆ ವಿವಿಧ ಕ್ಷೇತ್ರಗಳಲ್ಲಿನ ಸಹಯೋಗದ ಪ್ರಯತ್ನಗಳನ್ನು ಶ್ಲಾಘಿಸಿದ್ದಾರೆ.

VISTARANEWS.COM


on

G7 Summit
Koo

ಅಪುಲಿಯಾ: ಜಿ 7 ಶೃಂಗಸಭೆಯ (G7 Summit) ಹೊರತಾಗಿ ಪ್ರಧಾನಿ ನರೇಂದ್ರ ಮೋದಿ ಶುಕ್ರವಾರ ರಾತ್ರಿ ಇಟಲಿಯಲ್ಲಿ ಅಮರಿಕ ಅಧ್ಯಕ್ಷ ಜೋ ಬೈಡನ್ ಅವರನ್ನು ಅನೌಪಚಾರಿಕವಾಗಿ ಭೇಟಿಯಾದರು. ಭಾರತ ಮತ್ತು ಯುಎಸ್ “ಜಾಗತಿಕ ಒಳಿತನ್ನು ಮತ್ತಷ್ಟು ಹೆಚ್ಚಿಸಲು ಒಟ್ಟಾಗಿ ಕೆಲಸ ಮಾಡುತ್ತಲೇ ಇರುತ್ತವೆ” ಈ ಭೇಟಿಯ ಬಳಿಕ ಮೋದಿ ಹೇಳಿದ್ದಾರೆ. ಈ ಕುರಿತು ಎಕ್ಸ್​ನಲ್ಲಿ ಪೋಸ್ಟ್ ಮಾಡಿರುವ ಪಿಎಂ ಮೋದಿ ಸಂತೋಷ ವ್ಯಕ್ತಪಡಿಸಿದ್ದಾರೆ. ಯುಎಸ್ ಅಧ್ಯಕ್ಷರನ್ನು ಭೇಟಿಯಾಗುವುದು ಯಾವಾಗಲೂ ಸಂತೋಷವಾಗಿದೆ ಎಂದು ಬರೆದಿದ್ದಾರೆ.

ಜೋ ಬೈಡೆನ್​, ನಿಮ್ಮನ್ನು ಭೇಟಿಯಾಗುವುದು ಯಾವಾಗಲೂ ಸಂತೋಷದ ಸಂಗತಿ. ಜಾಗತಿಕ ಒಳಿತಿಗಾಗಿ ಭಾರತ ಮತ್ತು ಯುಎಸ್ಎ ಒಟ್ಟಾಗಿ ಕೆಲಸ ಮಾಡುವುದನ್ನು ಮುಂದುವರಿಸಲಿವೆ” ಎಂದು ಪಿಎಂ ಮೋದಿ ಬರೆದುಕೊಂಡಿದ್ದಾರೆ.

ಇದಕ್ಕೂ ಮುನ್ನ ಪ್ರಧಾನಿ ಮೋದಿ ಅವರು ಫ್ರೆಂಚ್ ಅಧ್ಯಕ್ಷ ಎಮ್ಯಾನುಯೆಲ್ ಮ್ಯಾಕ್ರೋನ್ ಅವರೊಂದಿಗೆ ಉಭಯ ದೇಶಗಳ ನಡುವಿನ ಕಾರ್ಯತಂತ್ರದ ಪಾಲುದಾರಿಕೆಯ ಪ್ರಮುಖ ಅಂಶಗಳ ಬಗ್ಗೆ ಚರ್ಚೆಯಲ್ಲಿ ತೊಡಗಿದ್ದರು. ಅಧ್ಯಕ್ಷ ಮ್ಯಾಕ್ರನ್ ಅವರು ದ್ವಿಪಕ್ಷೀಯ ಸಂಬಂಧಗಳ ಬಗ್ಗೆ ಉತ್ಸಾಹ ವ್ಯಕ್ತಪಡಿಸಿದ್ದಾರೆ. ಇಂಧನ, ರಕ್ಷಣೆ, ಸಂಶೋಧನೆ ಮತ್ತು ಸಂಸ್ಕೃತಿ ಸೇರಿದಂತೆ ವಿವಿಧ ಕ್ಷೇತ್ರಗಳಲ್ಲಿನ ಸಹಯೋಗದ ಪ್ರಯತ್ನಗಳನ್ನು ಶ್ಲಾಘಿಸಿದ್ದಾರೆ.

ತಮ್ಮ ಸಭೆಯಲ್ಲಿ, ಪಿಎಂ ಮೋದಿ ಮತ್ತು ಅಧ್ಯಕ್ಷ ಮ್ಯಾಕ್ರನ್ ಭಾರತ ಮತ್ತು ಫ್ರಾನ್ಸ್ ನಡುವಿನ ಕಾರ್ಯತಂತ್ರದ ಪಾಲುದಾರಿಕೆಯನ್ನು ರೂಪಿಸುವ ಪ್ರಮುಖ ವಿಷಯಗಳ ಬಗ್ಗೆ ಚರ್ಚಿಸಿದ್ದಾರೆ. ರಕ್ಷಣಾ ಸಹಯೋಗವು ಚರ್ಚೆಯಲ್ಲಿ ಪ್ರಮುಖ ವಿಷಯವಾಗಿತ್ತು. ಉಭಯ ನಾಯಕರು ರಕ್ಷಣಾ ಸಹಕಾರವನ್ನು ಹೆಚ್ಚಿಸುವ ಬದ್ಧತೆಯನ್ನು ಪುನರುಚ್ಚರಿಸಿದರು. ಚರ್ಚೆಯ ಸಮಯದಲ್ಲಿ ಭಾರತ ಮತ್ತು ಫ್ರಾನ್ಸ್ ನಡುವಿನ ಸಾಂಸ್ಕೃತಿಕ ಸಂಬಂಧಗಳ ವೃದ್ಧಿಗೂ ಆದ್ಯತೆ ನೀಡಲಾಯಿತು.

ಇದನ್ನೂ ಓದಿ: Narendra Modi: ತಂತ್ರಜ್ಞಾನ ಜತೆಗೆ ಮಾನವ ಕೇಂದ್ರಿತ ಏಳಿಗೆಗೆ ಭಾರತ ಆದ್ಯತೆ; ಇಟಲಿ ಜಿ7 ಸಭೆಯಲ್ಲಿ ಮೋದಿ

ಜಿ 7 ನಲ್ಲಿ, ಪ್ರಧಾನಿ ನರೇಂದ್ರ ಮೋದಿ ಅವರನ್ನು ಭೇಟಿಯಾಗಿದ್ದೆವು. ಇಂಧನ, ರಕ್ಷಣೆ, ಸಂಶೋಧನೆ ಮತ್ತು ಸಂಸ್ಕೃತಿ ಕ್ಷೇತ್ರಗಳಲ್ಲಿ ಭಾರತ ಮತ್ತು ಫ್ರಾನ್ಸ್ ಅನ್ನು ಒಂದುಗೂಡಿಸುವ ಕಾರ್ಯತಂತ್ರದ ಪಾಲುದಾರಿಕೆಯ ಪ್ರಮುಖ ವಿಷಯಗಳ ಬಗ್ಗೆ ಚರ್ಚಿಸಿದ್ದೇವೆ. ಅವರಲ್ಲಿ ಅತ್ಯುತ್ಸಾಹವಿದೆ. ಎಂದು ಫ್ರೆಂಚ್ ಅಧ್ಯಕ್ಷ ಮ್ಯಾಕ್ರನ್ ಎಕ್ಸ್ ನಲ್ಲಿ ಪೋಸ್ಟ್ ಮಾಡಿದ್ದಾರೆ.

ಒಂದು ವರ್ಷದಲ್ಲಿ ನಾಲ್ಕನೇ ಭೇಟಿ

ಒಂದು ವರ್ಷದಲ್ಲಿ ಅಧ್ಯಕ್ಷ ಮ್ಯಾಕ್ರನ್ ಅವರೊಂದಿಗೆ ಪ್ರಧಾನಿ ಮೋದಿಯವರ ನಾಲ್ಕನೇ ಸಭೆ ಇದಾಗಿದೆ. ಯುವಕರಲ್ಲಿ ಸಂಶೋಧನಾ ಜಾಯಮಾನ ಉತ್ತೇಜಿಸುವ ಮಾರ್ಗಗಳ ಬಗ್ಗೆಯೂ ಅವರು ಚರ್ಚಿಸಿದ್ದಾರೆ.

ಜಿ 7 ಶೃಂಗಸಭೆಯ ಹೊರತಾಗಿ ಪ್ರಧಾನಿ ಮೋದಿ ಅವರು ಯುಕೆ ಪ್ರಧಾನಿ ರಿಷಿ ಸುನಕ್ ಮತ್ತು ಉಕ್ರೇನ್ ಅಧ್ಯಕ್ಷ ವೊಲೊಡಿಮಿರ್ ಜೆಲೆನ್ಸ್ಕಿ ಅವರನ್ನು ಭೇಟಿಯಾದರು. ವಿಶೇಷವೆಂದರೆ, ಭಾರತವು ಗ್ರೂಪ್ ಆಫ್ ಸೆವೆನ್ (ಜಿ 7) ಶೃಂಗಸಭೆಯಲ್ಲಿ ವಿದೇಶಿ ಆಹ್ವಾನಿತ ದೇಶವಾಗಿ ಭಾಗವಹಿಸಿದೆ.

ಜೂನ್ 13 ರಿಂದ 15 ರವರೆಗೆ ಇಟಲಿಯ ಅಪುಲಿಯಾ ಪ್ರದೇಶದ ಐಷಾರಾಮಿ ಬೊರ್ಗೊ ಎಗ್ನಾಜಿಯಾ ರೆಸಾರ್ಟ್​​ನಲ್ಲಿ ಶೃಂಗಸಭೆ ನಡೆದಿದೆ. ಇಟಲಿ ಪ್ರಧಾನಿ ಜಾರ್ಜಿಯಾ ಮೆಲೋನಿ ಅವರ ಆಹ್ವಾನದ ಮೇರೆಗೆ ಪ್ರಧಾನಿ ಮೋದಿ ಶೃಂಗಸಭೆಯಲ್ಲಿ ಭಾಗವಹಿಸುತ್ತಿದ್ದಾರೆ.

Continue Reading

ದೇಶ

Narendra Modi: ತಂತ್ರಜ್ಞಾನ ಜತೆಗೆ ಮಾನವ ಕೇಂದ್ರಿತ ಏಳಿಗೆಗೆ ಭಾರತ ಆದ್ಯತೆ; ಇಟಲಿ ಜಿ7 ಸಭೆಯಲ್ಲಿ ಮೋದಿ

Narendra Modi: ಜಿ-7 ಶೃಂಗಸಭೆಯಲ್ಲಿ ನರೇಂದ್ರ ಮೋದಿ ಅವರು ಸೈಬರ್‌ ಭದ್ರತೆ, ಗ್ಲೋಬಲ್‌ ಸೌತ್‌, ಭಾರತದ ಅಧ್ಯಕ್ಷತೆಯಲ್ಲಿ ನಡೆದ ಜಿ-20 ಶೃಂಗಸಭೆ, ವಿಕಸಿತ ಭಾರತದ ಗುರಿ, ಇಂಧನದ ಸದ್ಬಳಕೆ, ಪರಿಸರ ಜಾಗೃತಿ ಸೇರಿ ಹಲವು ವಿಷಯಗಳನ್ನು ಪ್ರಸ್ತಾಪಿಸಿದರು. ಹಾಗೆಯೇ, ಇತ್ತೀಚೆಗೆ ನಡೆದ ಲೋಕಸಭೆ ಚುನಾವಣೆ, ಫಲಿತಾಂಶವನ್ನೂ ಮೋದಿ ಸ್ಮರಿಸಿದರು. ಅವರ ಭಾಷಣದ ಪ್ರಮುಖ ಅಂಶಗಳು ಇಲ್ಲಿವೆ.

VISTARANEWS.COM


on

Narendra Modi
Koo

ರೋಮ್: ಲೋಕಸಭೆ ಚುನಾವಣೆ ಬಳಿಕ ಮೊದಲ ಬಾರಿಗೆ ವಿದೇಶಕ್ಕೆ ತೆರಳಿರುವ ಪ್ರಧಾನಿ ನರೇಂದ್ರ ಮೋದಿ (Narendra Modi) ಅವರು ಜಿ-7 ಶೃಂಗಸಭೆಯಲ್ಲಿ (G7 Summit Italy) ಪಾಲ್ಗೊಂಡರು. ಇದೇ ವೇಳೆ ಮಾತನಾಡಿದ ಅವರು, “ತಂತ್ರಜ್ಞಾನದ ಅಳವಡಿಕೆ ಜತೆಗೆ ಮಾನವ ಕೇಂದ್ರಿತವಾಗಿಯೇ ಏಳಿಗೆ ಹೊಂದಲು ಭಾರತ ಆದ್ಯತೆ ನೀಡುತ್ತಿದೆ. ಜಾಗತಿಕವಾಗಿ ತಂತ್ರಜ್ಞಾನದ ಜತೆಗೇ ಮಾನವ ಕೇಂದ್ರಿತ ಅಭಿವೃದ್ಧಿಯು ಪ್ರಮುಖ ವಿಷಯವಾಗಬೇಕಿದೆ” ಎಂದು ಪ್ರತಿಪಾದಿಸಿದರು.

“ತಂತ್ರಜ್ಞಾನವನ್ನು ಸೃಜನಶೀಲತೆಯ ಸೃಷ್ಟಿಗಾಗಿ, ಅಭಿವೃದ್ಧಿಗಾಗಿ, ಏಳಿಗೆಗಾಗಿ ಬಳಸಬೇಕೇ ಹೊರತು, ವಿನಾಶಕ್ಕಾಗಿ ಅದನ್ನು ಬಳಸಬಾರದು. ಜಗತ್ತಿನಾದ್ಯಂತ ಬೇರೂರಿರುವ ಸಾಮಾಜಿಕ ಅಸಮಾನತೆಯನ್ನು ನಿರ್ಮೂಲನೆ ಮಾಡುವ ದಿಸೆಯಲ್ಲಿ ಇಂದು ತಂತ್ರಜ್ಞಾನವನ್ನು ಬಳಸಬೇಕಾಗಿದೆ. ಭಾರತವು, ಇಂತಹ ಪ್ರಯತ್ನ ಮಾಡುತ್ತಿದೆ. ಕೃತಕ ಬುದ್ಧಿಮತ್ತೆ ಸೇರಿ ಅತ್ಯಾಧುನಿಕ ತಂತ್ರಜ್ಞಾನವನ್ನು ಬಳಸಿಕೊಂಡು ಏಳಿಗೆಯತ್ತ ಮುಂದೆ ಸಾಗುತ್ತಿದೆ. ಎಲ್ಲರಿಗೂ ಕೃತಕ ಬುದ್ಧಿಮತ್ತೆ (AI For All) ಎಂಬ ತತ್ವದೊಂದಿಗೆ, ಕೃತಕ ಬುದ್ಧಿಮತ್ತೆ ಬಳಕೆಗೆ ರಾಷ್ಟ್ರೀಯ ಸ್ಟ್ರ್ಯಾಟಜಿಯೊಂದಿಗೆ ಮುನ್ನಡೆಯುತ್ತಿದೆ” ಎಂದು ತಿಳಿಸಿದರು.

ಚುನಾವಣೆ ಗೆಲುವಿನ ಪ್ರಸ್ತಾಪ

ಕಳೆದ ಲೋಕಸಭೆ ಚುನಾವಣೆ ಕುರಿತು ಕೂಡ ನರೇಂದ್ರ ಮೋದಿ ಮಾತನಾಡಿದರು. “ಇತ್ತೀಚೆಗೆ ಭಾರತದಲ್ಲಿ ನಡೆದ ಲೋಕಸಭೆ ಚುನಾವಣೆಯಲ್ಲೂ ತಂತ್ರಜ್ಞಾನವನ್ನು ಬಳಸಿಕೊಳ್ಳಲಾಯಿತು. ತಂತ್ರಜ್ಞಾನದ ಸಹಾಯದಿಂದ ಪಾರದರ್ಶಕವಾಗಿ ಚುನಾವಣೆ ನಡೆಸಲಾಯಿತು. ಜಗತ್ತಿನ ದೊಡ್ಡ ಪ್ರಜಾಪ್ರಭುತ್ವ ದೇಶದಲ್ಲಿ ನಡೆದ ಚುನಾವಣೆ ಫಲಿತಾಂಶವನ್ನು ಕೆಲವೇ ಗಂಟೆಗಳಲ್ಲಿ ಪ್ರಕಟಿಸಲಾಯಿತು. ನಮ್ಮ ದೇಶದ ಜನ ನನಗೆ ಮೂರನೇ ಬಾರಿಗೆ ಸೇವೆ ಮಾಡಲು ಅವಕಾಶ ಕೊಟ್ಟಿರುವುದಕ್ಕೆ ನಾನು ಧನ್ಯನಾಗಿದ್ದೇನೆ” ಎಂದು ಹೇಳಿದರು.

“ಸತತ ಮೂರನೇ ಬಾರಿಗೆ ಭಾರತದ ಪ್ರಧಾನಿಯಾಗಿ ಜನ ನನ್ನನ್ನು ಆಯ್ಕೆ ಮಾಡಿದ್ದಾರೆ. ಕಳೆದ ಆರು ದಶಕಗಳಲ್ಲಿಯೇ ಮೊದಲ ಬಾರಿಗೆ ನಮ್ಮ ದೇಶದ ಜನ ಸತತ ಮೂರನೇ ಬಾರಿಗೆ ಆಯ್ಕೆ ಮಾಡಿದ್ದಾರೆ. ಭಾರತದ ಮತದಾರರು ನೀಡಿದ ಜಯವು ಪ್ರಜಾಪ್ರಭುತ್ವದ ಜಯವಾಗಿದೆ” ಎಂದು ಹೇಳಿದರು. ಸೈಬರ್‌ ಭದ್ರತೆ, ಗ್ಲೋಬಲ್‌ ಸೌತ್‌, ಭಾರತದ ಅಧ್ಯಕ್ಷತೆಯಲ್ಲಿ ನಡೆದ ಜಿ-20 ಶೃಂಗಸಭೆ, ವಿಕಸಿತ ಭಾರತದ ಗುರಿ, ಇಂಧನದ ಸದ್ಬಳಕೆ, ಪರಿಸರ ಜಾಗೃತಿ ಸೇರಿ ಹಲವು ವಿಷಯಗಳನ್ನು ಮೋದಿ ಪ್ರಸ್ತಾಪಿಸಿದರು.

ಇದನ್ನೂ ಓದಿ: Narendra Modi: ಸ್ನೇಹಿತ ಮೋದಿಯನ್ನು ಕೈಮುಗಿದು ಆತ್ಮೀಯವಾಗಿ ಸ್ವಾಗತಿಸಿದ ಇಟಲಿ ಪ್ರಧಾನಿ ಮೆಲೋನಿ; Video ಇದೆ

Continue Reading

ದೇಶ

India’s Aamras : ಮಾವಿನಹಣ್ಣಿನ ಖಾದ್ಯಗಳ ಟಾಪ್‌ ಟೆನ್‌ ಪಟ್ಟಿಯಲ್ಲಿ ಭಾರತದ ಆಮ್‌ರಸ್‌ ವಿಶ್ವದಲ್ಲೇ ನಂಬರ್‌ ಒನ್!

ಇದು ಮಾವಿನಹಣ್ಣಿನ ಕಾಲ ಎಂಬ ಪ್ರೀತಿಯು ಅದಕ್ಕಾಗಿ ಕಾಯುವಂತೆ ಮಾಡುತ್ತದೆ. ಸೆಖೆಗಾಲದಲ್ಲಿ ಮಾವಿನಹಣ್ಣಿಗಾಗಿ ಕಾಯುವುದು, ಮಾವಿನಹಣ್ಣಿನಲ್ಲಿ ಬಗೆಬಗೆಯ ಭಕ್ಷ್ಯಗಳನ್ನು ತಯಾರಿಸುವುದು, ಇನ್ನೂ ಕೆಲವು ತಿಂಗಳುಗಳಿಗಾಗಿ ಮಾವಿನ ಹಣ್ಣಿನಿಂದ ಕೆಲವೊಂದು ಖಾದ್ಯಗಳನ್ನು ತಯಾರಿಸಿ ಇಡುವುದು ಎಲ್ಲವೂ ಪ್ರತಿ ಮನೆಯಲ್ಲೂ ಸಂಭ್ರಮವೇ. ಇಂತಹ ಪಾಕಪ್ರವೀಣರಾದ ನಮ್ಮ ಹಿರಿಮೆಗೆ ಇನ್ನೊಂದು ಗರಿ (India’s aamras)  ದೊರೆತಿದೆ.

VISTARANEWS.COM


on

Aamras
Koo

ಭಾರತೀಯರಿಗೆ ಮಾವಿನಹಣ್ಣಿನ ಕಾಲ ಎಂದರೆ ಪರ್ವಕಾಲ. ಎಷ್ಟೇ ಸೆಖೆ ಇರಲಿ, ಬೇಸಿಗೆಯ ಬಿಸಿಯಿಂದ ಮೈಯೆಲ್ಲ ಸುಡುತ್ತಿರಲಿ, ಇದು ಮಾವಿನಹಣ್ಣಿನ ಕಾಲ ಎಂಬ ಪ್ರೀತಿಯು ಅದಕ್ಕಾಗಿ ಕಾಯುವಂತೆ ಮಾಡುತ್ತದೆ. ಸೆಖೆಗಾಲದಲ್ಲಿ ಮಾವಿನಹಣ್ಣಿಗಾಗಿ ಕಾಯುವುದು, ಮಾವಿನಹಣ್ಣಿನಲ್ಲಿ ಬಗೆಬಗೆಯ ಭಕ್ಷ್ಯಗಳನ್ನು ತಯಾರಿಸುವುದು, ಇನ್ನೂ ಕೆಲವು ತಿಂಗಳುಗಳಿಗಾಗಿ ಮಾವಿನ ಹಣ್ಣಿನಿಂದ ಕೆಲವೊಂದು ಖಾದ್ಯಗಳನ್ನು ತಯಾರಿಸಿ ಇಡುವುದು ಎಲ್ಲವೂ ಪ್ರತಿ ಮನೆಯಲ್ಲೂ ಸಂಭ್ರಮವೇ. ಭಾರತದಲ್ಲಿ ಹಣ್ಣುಗಳ ರಾಜನಾಗಿ ಮೆರೆಯುವ ಈ ಮಾವಿನಹಣ್ಣು ತನ್ನ ವಿಶೇಷವಾದ ರುಚಿಯಿಂದ ತನ್ನತ್ತ ಪ್ರತಿಯೊಬ್ಬರನ್ನೂ ಸೆಳೆಯುತ್ತದೆ. ಅದರಲ್ಲೂ ನಾವು ಭಾರತೀಯರು ಮಾವಿನಹಣ್ಣಿನ ಬಗೆಬಗೆಯ ಭಕ್ಷ್ಯಗಳನ್ನು ಮಾಡಿ ತಿನ್ನುವುದರಲ್ಲಿ ಸಿದ್ಧಹಸ್ತರು. ಇಂತಹ ಪಾಕಪ್ರವೀಣರಾದ ನಮ್ಮ ಹಿರಿಮೆಗೆ ಇನ್ನೊಂದು ಗರಿ (India’s aamras) ದೊರೆತಿದೆ.

Aamras Or aam ras

ಇದಕ್ಕಿದೆ ಗತಕಾಲದ ಇತಿಹಾಸ

ಮಾವಿನ ಹಣ್ಣಿನ ಆಮ್‌ರಸ್‌ ಎಂಬುದಕ್ಕೆ ಗತಕಾಲದ ಇತಿಹಾಸವಿದೆ. ತಂಪಾದ ಆಮ್‌ರಸ್‌ ಹೆಸರು ಹೇಳಿದರೆ ಸಾಕು ಬಾಯಲ್ಲಿ ನೀರು ಜಿನುಗೀತು. ಇಂತಹ ಆಮ್‌ರಸ್‌ಗೀಗ ಪ್ರಪಂಚದಲ್ಲೇ ನಂಬರ್‌ ವನ್‌ ಸ್ಥಾನ ದೊರೆತಿದೆ.
ಹೌದು. 2024ರ ಜೂನ್‌ ತಿಂಗಳ ಟೇಸ್ಟ್‌ ಅಟ್ಲಾಸ್‌ ಸ್ಪರ್ಧೆಯಲ್ಲಿ ವಿಶ್ವದ ಟಾಪ್‌ 10 ಮಾವಿನ ಹಣ್ಣಿನ ಭಕ್ಷ್ಯಗಳ ಪೈಕಿ ಭಾರತದ ಆಮ್‌ರಸ್‌ಗೆ ಮೊದಲೇ ಸ್ಥಾನ ದೊರೆತಿದೆ.
ಮಹಾರಾಷ್ಟ್ರ ಹಾಗೂ ಗುಜರಾತ್‌ ರಾಜ್ಯಗಳಲ್ಲಿ ಅತ್ಯಂತ ಪ್ರಸಿದ್ಧವಾದ ಆಮ್‌ರಸ್‌ ಎಂಬ ಮಾವಿನಹಣ್ಣಿನ ತಿನಿಸು ಬಹಳ ಸರಳವಾದ ಆರದೆ, ಅಮೋಘ ರುಚಿಯ ಮಾವಿನಹಣ್ಣಿನ ಭಕ್ಷ್ಯ. ಮಾವಿನಹಣ್ಣಿನ ಕಾಲದಲ್ಲಿ ಪ್ರತಿಯೊಬ್ಬರೂ ತಮ್ಮ ಮನೆಗಳಲ್ಲಿ ಇದನ್ನು ಮಾಡುವ ಜೊತೆಗೆ ಬೆಳಗಿನ ಪೂರಿಯ ಜೊತೆಗೂ ಸೈಡ್‌ ಡಿಶ್‌ ಆಗಿ ತಿನ್ನುತ್ತಾರೆ. ಮಾವಿನ ಹಣ್ಣಿನ ಪಲ್ಪ್‌ ತೆಗೆದು ಅದಕ್ಕೆ ಕೇಸರಿ, ಒಣಶುಠಿ ಪುಡಿ, ಏಲಕ್ಕಿ ಹಾಗೂ ಸಕ್ಕರೆ ಸೇರಿಸಿ ಮಾಡುವ ಸರಳವಾದ ಆಮ್‌ರಸ್‌ ಬಹಳ ರುಚಿಕರ. ಆಲ್ಫೋನ್ಸೋ, ಕೇಸರ್‌ ಮತ್ತಿತರ ಮಾವಿನಹಣ್ಣಿನಲ್ಲಿ ಈ ಆಮ್‌ರಸ್‌ ಮಾಡಿದರೆ ಸ್ವರ್ಗಕ್ಕೆ ಕಿಚ್ಚು ಹಚ್ಚೆಂದ ಎಂದರೆ ತಪ್ಪಾಗದು. ಅಷ್ಟು ರುಚಿಕರ. ಇಂತಹ ಆಮ್‌ರಸ್‌ ವಿಶ್ವದಲ್ಲೇ ಮೊದಲ ಸ್ಥಾನ ಗಳಿಸಿದ್ದರಲ್ಲಿ ಅಚ್ಚರಿಯೇನಿಲ್ಲ.

Mango Chutney

ಮಾವಿನಕಾಯಿಯ ಚಟ್ನಿಗೂ ಸ್ಥಾನ

ಮಾವಿನಕಾಯಿಯ ಚಟ್ನಿಯೂ ಟೇಸ್ಟ್‌ ಅಟ್ಲಾಸ್‌ನ ಈ ಸ್ಪರ್ಧೆಯಲ್ಲಿ ಐದನೇ ಸ್ಥಾನ ಪಡೆದಿದೆ. ವಿಶ್ವದ ಅತ್ಯಂತ ರುಚಿಕರ ಡಿಪ್‌ಗಳ ಪೈಕಿ ಮಾವಿನಹಣ್ಣಿನ ಚಟ್ನಿ ಐದನೇ ಸ್ಥಾನ ಪಡೆದಿದ್ದು ವಿಶೇಷ. ಮಾವಿನಹಣ್ಣು, ಬೆಳ್ಳುಳ್ಳಿ, ಕೆಂಪು ಮೆಣಸಿನಕಾಯಿ, ಜೀರಿಗೆ, ಕೊತ್ತಂಬರಿ, ಅರಿಶಿನ, ಲವಂಗ, ಚಕ್ಕೆ, ಏಲಕ್ಕಿ, ಸಕ್ಕರೆ ಹಾಗೂ ವಿನೆಗರ್‌ ಸೇರಿಸಿ ಈ ಚಟ್ನಿಯನ್ನು ಮಾಡಲಾಗುತ್ತದೆಯಂತೆ. ಈ ವಿಶೇಷ ಬಗೆಯ ಚಟ್ನಿಗೆ ವಿಶೇಷ ಸ್ಥಾನ ಲಭಿಸಿದೆ.
ಇನ್ನುಳಿದಂತೆ, ಟಾಪ್‌ ಟೆನ್‌ ಪಟ್ಟಿಯಲ್ಲಿ ಎರಡನೇ ಸ್ಥಾನದಲ್ಲಿ ಥಾಯ್ಲೆಂಡಿನ ಮ್ಯಾಂಗೋ ಸ್ಟಿಕಿ ರೈಸ್‌, ಮೂರನೇ ಸ್ಥಾನದಲ್ಲಿ ಸೋರ್ಬೆಟಿಸ್‌, ನಾಲ್ಕನೇ ಸ್ಥಾನದಲ್ಲಿ ಇಂಡೋನೇಷ್ಯಾದ ರುಜಕ್‌, ಐದನೇ ಸ್ಥಾನದಲ್ಲಿ ಮಾವಿನಹಣ್ಣಿನ ಚಟ್ನಿ ಇವೆ. ನಂತರದ ಸ್ಥಾನಗಳಲ್ಲಿ ಹಾಂಗ್‌ಕಾಂಗ್‌ನ ಮ್ಯಾಂಗೋ ಪೊಮೇಲೋ ಸಾಗೋ, ಚೈನಾದ ಮಂಗುವೋ ಬುಡಿಂಗ್‌, ಇಂಡೋನೇಷ್ಯಾದ ರುಜಕ್‌ ಸಿಂಗುರ್, ಚೈನಾದ ಬಾವೋಬಿಂಗ್‌, ಥಾಯ್ಲೆಂಡಿನ ಮಾಮುಂಗ್‌ ನಾಮ್‌ ಪ್ಲಾವಾನ್‌ ಟಾಪ್‌ ಟೆನ್‌ ಪಟ್ಟಿಯಲ್ಲಿ ಸ್ಥಾನ ಗಳಿಸಿವೆ. ಮಾವಿನಹಣ್ಣಿನ ವಿಶೇಷಚವಾದ ಚಟ್ನಿಯೂ ಕೂಡಾ ಈ ಪಟ್ಟುಯಲ್ಲಿ ಐದನೇ ಸ್ಥಾನ ಗಳಿಸಿರುವುದು ವಿಶೇಷ.

Continue Reading
Advertisement
James Wan
ಸಿನಿಮಾ4 mins ago

James Wan: ಜೇಮ್ಸ್‌ ವಾನ್‌ ನಿರ್ದೇಶನದ ಈ 6 ಥ್ರಿಲ್ಲರ್‌ ಚಿತ್ರಗಳನ್ನು ತಪ್ಪದೇ ನೋಡಿ!

Bhandara Fair
ಬಾಗಲಕೋಟೆ7 mins ago

Bhandara Fair : ಲೋಕಾಪುರದ ಭಂಡಾರ ಜಾತ್ರೆಗೆ ಅದ್ಧೂರಿ ಚಾಲನೆ; ಭಂಡಾರದಲ್ಲಿ ಮಿಂದೆದ್ದ ಭಕ್ತ ಸಮೂಹ

darshan give sopports to arrested people
ಸ್ಯಾಂಡಲ್ ವುಡ್19 mins ago

Actor Darshan: ಎಲ್ಲ ಖರ್ಚು ನೋಡಿಕೊಳ್ತೇನೆ, ನೀವು ಸರೆಂಡರ್‌ ಆಗಿ ಎಂದಿದ್ದ ದರ್ಶನ್ ತಾನೇ ಪೊಲೀಸ್‌ ಬೋನಿಗೆ ಬಿದ್ದ!

T20 World Cup 2024 Super 8
ಕ್ರಿಕೆಟ್45 mins ago

T20 World Cup 2024 Super 8: ಸೂಪರ್​-8 ಪಂದ್ಯಗಳ ವೇಳಾಪಟ್ಟಿ ಪ್ರಕಟ; ಭಾರತಕ್ಕೆ ಆಫ್ಘಾನ್​ ಮೊದಲ ಎದುರಾಳಿ

Indresh Kumar
Lok Sabha Election 202446 mins ago

Indresh Kumar: ರಾಮ ಭಕ್ತರು ಅಧಿಕಾರದಲ್ಲಿದ್ದಾರೆ, ರಾಮ ವಿರೋಧಿಗಳು ಸೋತಿದ್ದಾರೆ; ಆರ್‌ಎಸ್‌ಎಸ್‌ ನಾಯಕನ ಹೊಸ ಹೇಳಿಕೆ

Actor darshan
ಉತ್ತರ ಕನ್ನಡ49 mins ago

Actor Darshan : ಸಂಕಷ್ಟ ನಿವಾರಣೆಗಾಗಿ ದೇವರ ಮೊರೆ ಹೋದ ನಟ ದರ್ಶನ್‌ ಕುಟುಂಬಸ್ಥರು

Gold Rate Today
ಚಿನ್ನದ ದರ53 mins ago

Gold Rate Today: ಮತ್ತೆ ಏರಿಕೆಯ ಹಾದಿಯಲ್ಲಿ ಚಿನ್ನದ ಬೆಲೆ; ಆಭರಣ ಖರೀದಿಯ ಮುನ್ನ ಇಂದಿನ ದರ ಗಮನಿಸಿ

Actor Darshan new statement to police
ಸ್ಯಾಂಡಲ್ ವುಡ್55 mins ago

Actor Darshan: ಎರಡೇ ಎರಡೇಟು ಬಿಟ್ಟಿದ್ದೆ, ಹಿಂಗಾಗೋಯ್ತು ಸಾರ್‌! ಪೊಲೀಸರ ಮುಂದೆ ದರ್ಶನ್‌ ಹೇಳಿಕೆ!

snake bite
ಚಿಕ್ಕಬಳ್ಳಾಪುರ1 hour ago

Snake Bite : ನಿದ್ದೆಗೆ ಜಾರಿದ 3 ವರ್ಷದ ಬಾಲಕನನ್ನು ಕಚ್ಚಿ ಸಾಯಿಸಿದ ನಾಗರಹಾವು

Actor Darshan case Film chamber visit to the renukaswamy house
ಸ್ಯಾಂಡಲ್ ವುಡ್1 hour ago

Actor Darshan:  ರೇಣುಕಾಸ್ವಾಮಿ ಕುಟುಂಬಕ್ಕೆ ಸಾಂತ್ವನ ಹೇಳಲು ಹೊರಟ ಚಲನಚಿತ್ರ ವಾಣಿಜ್ಯ ಮಂಡಳಿ

Sharmitha Gowda in bikini
ಕಿರುತೆರೆ8 months ago

Geetha Serial Kannada: ನಿದ್ದೆ ಕದ್ದ ಚೋರಿ! ನಟಿ `ಭಾನುಮತಿ’ ಹಾಟ್‌ ಪೋಟೊಗಳಿಗೆ ಫ್ಯಾನ್ಸ್ ಫುಲ್ ಫಿದಾ

Kannada Serials
ಕಿರುತೆರೆ8 months ago

Kannada Serials TRP: 2ನೇ ಸ್ಥಾನದಲ್ಲಿ 2 ಧಾರಾವಾಹಿಗಳು; ಟಿಆರ್‌ಪಿ ರೇಸ್‌ನಲ್ಲಿಲ್ಲ ಭಾಗ್ಯಲಕ್ಷ್ಮೀ!

Bigg Boss- Saregamapa 20 average TRP
ಕಿರುತೆರೆ8 months ago

Kannada Serials TRP: ಏಳನೇ ಸ್ಥಾನಕ್ಕೆ ʻಅಮೃತಧಾರೆʼ ಕುಸಿತ; ಬಿಗ್‌ ಬಾಸ್‌-ಸರಿಗಮಪ ಟಿಆರ್‌ಪಿ ಎಷ್ಟು?

galipata neetu
ಕಿರುತೆರೆ7 months ago

Kanyadana Serial: ಕಿರುತೆರೆಗೆ ಮತ್ತೆ ಎಂಟ್ರಿ ಕೊಟ್ಟ ʻಗಾಳಿಪಟʼ ಖ್ಯಾತಿಯ ʻನೀತುʼ!

Kannada Serials
ಕಿರುತೆರೆ9 months ago

Kannada Serials TRP: ನಾಲ್ಕನೇ ಸ್ಥಾನಕ್ಕೆ ಕುಸಿತ ಕಂಡ ʻಸೀತಾ ರಾಮʼ; ಟಿಆರ್‌ಪಿ ರೇಸ್‌ಗೆ ʻಭಾಗ್ಯಲಕ್ಷ್ಮಿʼ ಬ್ಯಾಕ್‌!

Kannada Serials
ಕಿರುತೆರೆ8 months ago

Kannada Serials TRP: ಟಿಆರ್‌ಪಿಯಲ್ಲಿ ʻಭಾಗ್ಯಲಕ್ಷ್ಮೀʼ ಹವಾ; ʻಪುಟ್ಟಕ್ಕನ ಮಕ್ಕಳುʼ ಧಾರಾವಾಹಿಗೆ ಸಂಕಷ್ಟ!

Bigg Boss' dominates TRP; Sita Rama fell to the sixth position
ಕಿರುತೆರೆ8 months ago

Kannada Serials TRP: ಟಿಆರ್‌ಪಿಯಲ್ಲಿ ʻಬಿಗ್ ಬಾಸ್ʼದೇ ಮೇಲುಗೈ; 6ನೇ ಸ್ಥಾನಕ್ಕೆ ಕುಸಿದ ʻಸೀತಾ ರಾಮʼ

geetha serial Dhanush gowda engagement
ಕಿರುತೆರೆ6 months ago

Dhanush Gowda: ಗೀತಾ ಧಾರಾವಾಹಿ ನಟನ ನಿಶ್ಚಿತಾರ್ಥ; ಭವ್ಯಾಳ ಕಮೆಂಟ್‌ ಬಾಕ್ಸ್‌ ಆಫ್‌!

varun
ಕಿರುತೆರೆ7 months ago

Brindavana Serial: ʼಬೃಂದಾವನʼ ಧಾರಾವಾಹಿಯಲ್ಲಿ ದೊಡ್ಡ ಟ್ವಿಸ್ಟ್‌; ಪ್ರಮುಖ ಪಾತ್ರಧಾರಿಯೇ ಬದಲು

Kannada Serials
ಕಿರುತೆರೆ9 months ago

Kannada Serials TRP: ಟಿಆರ್‌ಪಿಯಲ್ಲಿ ಏರಿಕೆ ಕಂಡ ʻಅಮೃತಧಾರೆʼ; ʻಗಟ್ಟಿಮೇಳʼಕ್ಕೆ ನಾಲ್ಕನೇ ಸ್ಥಾನ!

Karnataka Weather Forecast
ಮಳೆ19 hours ago

Karnataka Weather : ಕರಾವಳಿ, ಉತ್ತರ ಒಳನಾಡಿನಲ್ಲಿ ವರುಣಾರ್ಭಟ; ನಾಳೆಯು ಹಲವೆಡೆ ಸಿಕ್ಕಾಪಟ್ಟೆ ಮಳೆ

Actor Darshan
ಬೆಂಗಳೂರು20 hours ago

Actor Darshan : ರೇಣುಕಾಸ್ವಾಮಿಯನ್ನು ಕಿಡ್ನ್ಯಾಪ್ ಮಾಡಿ ಕರೆತರುವ ದೃಶ್ಯ ಸಿಸಿ ಕ್ಯಾಮೆರಾದಲ್ಲಿ ಸೆರೆ!

actor Darshan
ಬೆಂಗಳೂರು20 hours ago

Actor Darshan : ರೇಣುಕಾಸ್ವಾಮಿ ಕೊಲೆ ಕೇಸ್‌ನಲ್ಲಿ ಮತ್ತಿಬ್ಬರು ಸರೆಂಡರ್‌; ಆರೋಪಿಗಳ ಸಂಖ್ಯೆ 16ಕ್ಕೆ ಏರಿಕೆ

Actor Darshan
ಸಿನಿಮಾ21 hours ago

Actor Darshan : ರೇಣುಕಾಸ್ವಾಮಿ ‌ಮೃತದೇಹ ಬಿಸಾಡಿ ಬಳಿಕ ಸಾಕ್ಷ್ಯಇದ್ದ 2 ಮೊಬೈಲ್‌ಗಳನ್ನು ಮೋರಿಗೆ ಎಸೆದ್ರಾ ಆರೋಪಿಗಳು?

karnataka weather Forecast
ಮಳೆ4 days ago

Karnataka Weather : ಭಾರಿ ಮಳೆಗೆ ಗುಡ್ಡದಿಂದ ಉರುಳಿ ಬಿದ್ದ ಬಂಡೆಗಲ್ಲು; ಬೆಂಗಳೂರಲ್ಲೂ ಸಂಜೆ ವರ್ಷಧಾರೆ

actor Darshan
ಚಿತ್ರದುರ್ಗ4 days ago

Actor Darshan: ರೇಣುಕಾ ಸ್ವಾಮಿ ಕೊಲೆ ಕೇಸ್‌ನಲ್ಲಿ ದರ್ಶನ್‌ ಅರೆಸ್ಟ್‌; ಪ್ರಕರಣವನ್ನು ಸಿಬಿಐಗೆ ವಹಿಸಲು ಒತ್ತಾಯ

Actor Darshan gets a series of questions from the police
ಸಿನಿಮಾ4 days ago

Actor Darshan : ಪವಿತ್ರಗೌಡ ಬಗ್ಗೆ ಪೋಸ್ಟ್‌ ಮಾಡಿದ್ರೆ ನಿಮಗ್ಯಾಕೆ ಕೋಪ? ದರ್ಶನ್‌ಗೆ ಪೊಲೀಸರ ಪ್ರಶ್ನೆಗಳ ಸುರಿಮಳೆ

Actor Darshan
ಸಿನಿಮಾ4 days ago

Actor Darshan : ದರ್ಶನ್‌ ಜೈಲಿಗೆ ಹೋಗುತ್ತಿರುವುದು ಇದೇ ಮೊದಲಲ್ಲ; ನಟನ ಮೇಲಿವೆ ಹತ್ತಾರು ಕೇಸ್‌ಗಳು!

Saptami Gowda
ಸಿನಿಮಾ4 days ago

Saptami Gowda : ಯುವ ಪತ್ನಿ ಶ್ರೀದೇವಿ ವಿರುದ್ಧ ಮಾನಹಾನಿ ಕೇಸ್; ಕಾನೂನು ಹೋರಾಟಕ್ಕೆ ಮುಂದಾದ ನಟಿ ಸಪ್ತಮಿ ಗೌಡ!

Karnataka weather Forecast
ಮಳೆ5 days ago

Karnataka Weather : ಭಾರಿ ಮಳೆಗೆ ಮನೆ ಗೋಡೆ ಕುಸಿದು ಎಮ್ಮೆಗಳು ಸಾವು; ಆಕಳಿನ ಜೀವ ತೆಗೆದ ವಿದ್ಯುತ್‌ ತಂತಿ

ಟ್ರೆಂಡಿಂಗ್‌