Sedition Case : ಪಾಕಿಸ್ತಾನ್‌ ಮುರ್ದಾಬಾದ್‌ ಬದಲು ಜಿಂದಾಬಾದ್‌ ಎಂದ ಬಿಜೆಪಿ ಕಾರ್ಯಕರ್ತ ಜೈಲಿಗೆ! - Vistara News

ಮಂಡ್ಯ

Sedition Case : ಪಾಕಿಸ್ತಾನ್‌ ಮುರ್ದಾಬಾದ್‌ ಬದಲು ಜಿಂದಾಬಾದ್‌ ಎಂದ ಬಿಜೆಪಿ ಕಾರ್ಯಕರ್ತ ಜೈಲಿಗೆ!

Sedition Case : ಮಂಡ್ಯದಲ್ಲಿ ಎರಡು ವರ್ಷದ ಹಿಂದೆ ಅಚಾತುರ್ಯದಿಂದ ಪಾಕಿಸ್ತಾನ್‌ ಜಿಂದಾಬಾದ್‌ ಘೋಷಣೆ ಕೂಗಿದ ಬಿಜೆಪಿ ಕಾರ್ಯಕರ್ತನನ್ನು ಈಗ ಬಂಧಿಸಿ ಜೈಲಿಗಟ್ಟಲಾಗಿದೆ.

VISTARANEWS.COM


on

Sedition Case Mandya
ಮಹತ್ವದ, ಕುತೂಹಲಕರ ಸುದ್ದಿಗಾಗಿ ಫಾಲೊ ಮಾಡಿ
Koo

ಮಂಡ್ಯ:‌ ರಾಜ್ಯಸಭಾ ಚುನಾವಣೆಯ ವಿಜಯೋತ್ಸವ ಸಂದರ್ಭದಲ್ಲಿ ವಿಧಾನ ಸೌಧದಲ್ಲೇ (Vidhana Soudha) ಪಾಕಿಸ್ತಾನ್‌ ಜಿಂದಾಬಾದ್‌ (Pakistan Zindabad) ಘೋಷಣೆ ಕೂಗಿದ (Sedition Case) ಮೂವರು ದುಷ್ಕರ್ಮಿಗಳನ್ನು ಬಂಧಿಸಿದ ಬೆನ್ನಿಗೇ ಇತ್ತ ಮಂಡ್ಯದಲ್ಲಿ (Mandya News) ಎರಡು ವರ್ಷದ ಹಿಂದಿನ ಪ್ರಕರಣಕ್ಕೆ ಜೀವ ಬಂದಿದ್ದು, ಬಿಜೆಪಿ ಕಾರ್ಯಕರ್ತರೊಬ್ಬರನ್ನು ಬಂಧಿಸಲಾಗಿದೆ (BJP Activist Arrested). ಅವರು ಮುರ್ದಾಬಾದ್‌ ಬದಲು ತಪ್ಪಿ ಜಿಂದಾಬಾದ್‌ ಎಂದು ಹೇಳಿದ್ದಾರೆ.

ಎರಡು ವರ್ಷದ ಹಿಂದೆ ಮಂಡ್ಯದ ಸಂಜಯ ವೃತ್ತದಲ್ಲಿ ನಡೆದಿದ್ದ ಪ್ರತಿಭಟನೆ ಸಂದರ್ಭ ಮಂಡ್ಯ ತಾಲೂಕಿನ ಡನಾಯಕನಪುರ ರವಿ ಎಂಬವರು ಪಾಕಿಸ್ತಾನ್‌ ಜಿಂದಾಬಾದ್‌ ಎಂಬ ಘೋಷಣೆ ಕೂಗಿದ್ದರು. ಬೆಂಗಳೂರಿನ ಪ್ರಕರಣ ವಿಕೋಪಕ್ಕೆ ಹೋಗುತ್ತಿದ್ದಂತೆಯೇ ಮಂಡ್ಯದ ಘಟನೆಯೂ ಮೇಲೆದ್ದು ಬಂದಿತ್ತು. ರವಿ ಅವರು ಅಚಾತುರ್ಯದಿಂದ ಪಾಕಿಸ್ತಾನ ಪರ ಘೋಷಣೆ ಕೂಗಿದ್ದಾಗಿ ಹೇಳಿದ್ದರೂ ಏನು ಮಾಡಿದರೂ ಅದು ತಪ್ಪೇ ಎಂದು ಇನ್ನೊಂದು ವಾದ ಕೇಳಿಬಂದಿತ್ತು.

2022ರ ಡಿಸೆಂಬರ್‌ 18ರಂದು ಬಿಜೆಪಿ ಕಾರ್ಯಕರ್ತರು ಪ್ರತಿಭಟನೆ ನಡೆಸುವ ವೇಳೆ ಪಾಕಿಸ್ತಾನ್ ಜಿಂದಾಬಾದ್ ಎಂದು ಘೋಷಣೆ ಕೇಳಿಬಂದಿತ್ತು. ರವಿ ಎಂಬವರು ಪಾಕಿಸ್ತಾನ್‌ ಮುರ್ದಾಬಾದ್‌ ಎಂದು ಹೇಳುವ ಬದಲು ಜಿಂದಾಬಾದ್‌ ಎಂದು ಘೋಷಣೆ ಕೂಗಿದ್ದರು.

ಬೆಂಗಳೂರು ವಿಧಾನಸೌಧ ಪ್ರಕರಣ ತೀವ್ರತೆ ಪಡೆದುಕೊಳ್ಳುತ್ತಿದ್ದಂತೆಯೇ ಕಾಂಗ್ರೆಸ್‌ ಕಾರ್ಯಕರ್ತರು ಈ ಪ್ರಕರಣವನ್ನು ಎತ್ತಿ ತೋರಿಸಲು, ಟ್ರೋಲ್‌ ಮಾಡಲು ಆರಂಭಿಸಿದ್ದರು.

ಇದನ್ನೂ ಓದಿ : Sedition Case: ಪಾಕ್‌ ಪರ ಘೋಷಣೆ ಕೂಗಿದವರಿಗೆ 3 ದಿನ ಪೊಲೀಸ್‌ ಕಸ್ಟಡಿ: ಕೋರ್ಟ್‌ ಆದೇಶ

ಸೋಮವಾರ ರಾತ್ರಿ ಎಫ್‌ಐಆರ್‌ ದಾಖಲು

ಮಂಡ್ಯದಲ್ಲಿ ಪಾಕಿಸ್ತಾನ ಪರ ಘೋಷಣೆ ಕೂಗಿದ್ದ ಬಿಜೆಪಿ ಕಾರ್ಯಕರ್ತರ ವಿರುದ್ಧ ಸೋಮವಾರ ರಾತ್ರಿ ಕನ್ನಂಬಾಡಿ ಕುಮಾರ್ ಎಂಬವರು ದೂರು ದಾಖಲಿಸಿದರು. ಇದರ ಆಧಾರದ ಮೇಲೆ ಬಿಜೆಪಿ ಕಾರ್ಯಕರ್ತರ ಮೇಲೆ ಪೊಲೀಸರು ಎಫ್ ಐ ಆರ್ ದಾಖಲಿಸಿದರು. ಮಂಡ್ಯದ ಪಶ್ಚಿಮ ಠಾಣೆ ಪೊಲೀಸರು ಉಪ್ಪರಕನ‌ಹಳ್ಳಿ ಆರಾಧ್ಯ, ಡಣಾಕನಪುರ ರವಿ ಮತ್ತು ಇತರರ ವಿರುದ್ಧ ಎಫ್ ಐ ಆರ್ ದಾಖಲು ಮಾಡಿಕೊಂಡಿದ್ದು ಬಳಿಕ ರಾತ್ರಿಯೇ ರವಿ ಅವರನ್ನು ಬಂಧಿಸಿದ್ದಾರೆ.

ಘೋಷಣೆ ಬಳಿಕ ಸ್ಪಷ್ಟನೆ ನೀಡಿ ಕ್ಷಮೆ ಕೇಳಿದ್ದ ಬಿಜೆಪಿ ಕಾರ್ಯಕರ್ತ

ನಿಜವೆಂದರೆ, ಅಂದು ಆ ಘಟನೆ ನಡೆದ ಕೂಡಲೇ ರವಿ ಅವರು ಏನಾಯಿತು ಎಂಬ ಬಗ್ಗೆ ಸ್ಪಷ್ಟನೆ ನೀಡಿದ್ದರು ಮತ್ತು ಕ್ಷಮೆ ಕೂಡಾ ಯಾಚಿಸಿದ್ದರು. ಡಣಾಯಕನಪುರದ ರವಿ ಅವರು, ನಾನೊಬ್ಬ ರೈತನಾಗಿದ್ದು ಹಿಂದಿ ಭಾಷೆ ಅರ್ಥ ಆಗದೆ ಜಿಂದಾ ಬಾದ್ ಮುರದಾ ಬಾದ್ ಗೆ ವ್ಯತ್ಯಾಸ ಗೊತ್ತಾಗದೆ ಹಾಗೆ ಕೂಗಿದ್ದೀನಿ ಎಂದು ಹೇಳಿದ್ದರು. ಅಂದೇ ರವಿ ಅವರು ಜಿಂದಾಬಾದ್‌ ಘೋಷಣೆ ಕೂಗಿದ ಕೂಡಲೇ ಸಹವರ್ತಿಗಳು ಬಾಯಿ ಮುಚ್ಚಿಸಿದ್ದರು.

ಹಾಗಾಗಿ ಅಂದು ಆ ಪ್ರಕರಣ ಗಂಭೀರ ಸ್ವರೂಪ ಪಡೆದುಕೊಂಡಿರಲಿಲ್ಲ. ಈಗ ಕಾಂಗ್ರೆಸ್‌ ಪಕ್ಷದ ನಾಯಕರು ಬಿಜೆಪಿ ವಿರುದ್ಧ ಈ ಪ್ರಕರಣದ ಪ್ರಯೋಗ ಮಾಡಿದ್ದಾರೆ.

ಕ್ಷಣ ಕ್ಷಣದ ಮಾಹಿತಿಗಾಗಿ Vistara News FaceBook ಪೇಜ್ ಫಾಲೋ ಮಾಡಿ
ಮಹತ್ವದ ಮಾಹಿತಿಗಾಗಿ ವಿಸ್ತಾರ ನ್ಯೂಸ್ ಆ್ಯಪ್ ಉಚಿತವಾಗಿ ಡೌನ್ ಲೋಡ್ ಮಾಡಿಕೊಳ್ಳಿ: Andriod App | IOS App
Continue Reading
Click to comment

Leave a Reply

Your email address will not be published. Required fields are marked *

ಮಳೆ

Karnataka Rain : ಮಳೆಗೆ ಮನೆ ಮುಳುಗಡೆಯಾದ ಸುದ್ದಿ ಕೇಳಿ ಮನೆ ಯಜಮಾನ ಹೃದಯಾಘಾತದಿಂದ ಸಾವು

Karnataka Rain : ಭಾರಿ ಮಳೆಗೆ ಮನೆ ಮುಳುಗಡೆಯಾದ ಸುದ್ದಿ ಕೇಳಿದ ಮನೆ ಯಜಮಾನ ಹೃದಯಾಘಾತದಿಂದ ಮೃತಪಟ್ಟರೆ, ಮತ್ತೊಂದು ಕಡೆ ಕಾಲು ಜಾರಿ ಬಿದ್ದ ವೃದ್ಧೆ ಕೊಚ್ಚಿ ಹೋಗಿದ್ದಾರೆ.

VISTARANEWS.COM


on

By

karnataka Rain
Koo

ಬೆಳಗಾವಿ: ಭಾರಿ ಮಳೆಗೆ (Karnataka Rain) ಮನೆಗೆ ನೀರು ನುಗ್ಗಿದ ವಿಚಾರ ಕೇಳಿ ಹೃದಯಾಘಾತದಿಂದ (Heart attack) ಮನೆ ಯಜಮಾನ ಮೃತಪಟ್ಟಿರುವ ಘಟನೆ ಬೆಳಗಾವಿ ಜಿಲ್ಲೆಯ ಗೋಕಾಕ್ ನಗರದಲ್ಲಿ ನಡೆದಿದೆ. ನಿನ್ನೆ ಶನಿವಾರ ಸಂಜೆ ಮನೆಗೆ ನೀರು ಬರುವ ವಿಚಾರ ತಿಳಿದು ದಶರಥ ಬಂಡಿ (80) ಎಂಬುವವರು ಅಘಾತಕ್ಕೆ ಒಳಗಾಗಿ, ಹೃದಯಾಘಾತದಿಂದ ಮೃತಪಟ್ಟಿದ್ದಾರೆ.

ಇತ್ತ ದಶರಥ ಕುಟುಂಬಸ್ಥರು ರಾತ್ರಿ ಅಂತ್ಯಸಂಸ್ಕಾರ ಮಾಡಿ ಮನೆಗೆ ಹೋಗುವಷ್ಟರಲ್ಲಿ ಮನೆಯೇ ಮುಳುಗಿ ಹೋಗಿದೆ. ರಾತ್ರೋರಾತ್ರಿ ಉಟ್ಟಬಟ್ಟೆಯಲ್ಲೇ ಹೊರ ಬಂದಿದ್ದೇವೆ ಎಂದು ಗೋಕಾಕ್ ನಗರದ ಉಪ್ಪಾರ ಗಲ್ಲಿ ನಿವಾಸಿ‌ ಲಕ್ಷ್ಮಿ ಅಳಲು ತೋಡಿಕೊಂಡಿದ್ದಾರೆ. ಸದ್ಯ ಮಕ್ಕಳು, ನಾಯಿ ಮರಿಗಳ ಜತೆಗೆ ಕಾಳಜಿ ಕೇಂದ್ರಕ್ಕೆ ಶಿಫ್ಟ್‌ ಆಗಿದ್ದಾರೆ. ಮನೆ ಯಜಮಾನ ಮೃತಪಟ್ಟ ಬಳಿಕ ಕಾರ್ಯಗಳನ್ನೂ ಮಾಡಲಾಗದೇ ಕುಟುಂಬ ಕಂಗಲಾಗಿದ್ದಾರೆ.

ಕಾಲು ಜಾರಿ ನದಿಗೆ ಬಿದ್ದ ವೃದ್ಧೆ ಸಾವು

ಅಪರಿಚಿತ ವೃದ್ಧೆ ಕುಮದ್ವತಿ ನದಿಯಲ್ಲಿ ಕಾಲು ಜಾರಿ ಬಿದ್ದಿದ್ದು, ವೃದ್ದೆ ಜೀವ ಉಳಿಸಲು ತುಂಬಿದ ನದಿಗೆ ಬಸ್‌ ಚಾಲಕ ನದಿಗೆ ಹಾರಿದ್ದರು. ಹಾವೇರಿ ಜಿಲ್ಲೆ ರಟ್ಟಿಹಳ್ಳಿ ತಾಲ್ಲೂಕಿನ ತಿಪ್ಪಾಯಿಕೊಪ್ಪ ಗ್ರಾಮದಲ್ಲಿ ಘಟನೆ ನಡೆದಿದೆ. ನದಿಗೆ ಬಿದ್ದ ಅಪರಿಚಿತ ವೃದ್ಧೆ ಕಂಡು ಜೀವ ಉಳಿಸಲು ಮುಂದಾದರು. ಆದರೆ ಉಸಿರಾಟದ ತೊಂದರೆಯಿಂದ ವೃದ್ಧೆ ಕೊನೆಯುಸಿರೆಳೆದಿದ್ದಾರೆ. ಜೀವದ ಹಂಗು ತೊರೆದು ವೃದ್ದೆ ಕಾಪಾಡಲು ಮುಂದಾದ ಚಾಲಕ ಮಜೀದ್ ಸಾಬ್ ಗುಬ್ಬಿ ಅವರ ಪ್ರಯತ್ನ ವಿಫಲವಾಗಿದೆ.

ಇದನ್ನೂ ಓದಿ: Karnataka Rain : ಭಾರಿ ಗಾಳಿ-ಮಳೆಗೆ ಚಲಿಸುತ್ತಿದ್ದ ಬೈಕ್ ಮೇಲೆ ಬಿದ್ದ ಮರ; ಸವಾರ ಸ್ಥಳದಲ್ಲೆ ಸಾವು

ಪ್ರವಾಹ ಭೀತಿ 10ಕ್ಕೂ ಹೆಚ್ಚು ಗರ್ಭಿಣಿಯರ ಸ್ಥಳಾಂತರ

ರಾಯಚೂರಲ್ಲಿ ಕೃಷ್ಣಾ ನದಿ ತೀರದ ಗ್ರಾಮಗಳಿಗೆ ಪ್ರವಾಹದ ಭೀತಿ ಹಿನ್ನೆಲೆಯಲ್ಲಿ ಮುನ್ನೆಚ್ಚರಿಕೆಯಾಗಿ ಗರ್ಭಿಣಿಯರನ್ನು ಬೇರೆಡೆಗೆ ಸ್ಥಳಾಂತರ ಮಾಡಲಾಗಿದೆ. ಆಂಬ್ಯುಲೆನ್ಸ್‌ ಮೂಲಕ ಸುರಕ್ಷಿತ ಸ್ಥಳಕ್ಕೆ ರವಾನಿಸಲಾಗಿದೆ. ಕಡದರಗಡ್ಡಿ, ಮ್ಯಾದರಗಡ್ಡಿ, ಹಂಚಿನಾಳ, ಯರಗೋಡಿ, ವಕ್ಕಂಗಡ್ಡಿ ಸೇರಿದಂತೆ ಇನ್ನಿತರ ನಡುಗಡ್ಡೆ ಗ್ರಾಮಗಳಲ್ಲಿ ಇದ್ದ 15 ಮಂದಿ ಗರ್ಭಿಣಿಯರನ್ನು ಹಂಚಿನಾಳ ಗ್ರಾಮದ ಹೆಲ್ತ್ ಸೆಂಟರ್ ಶಿಫ್ಟ್‌ ಮಾಡಲಾಗಿದೆ. ಕೃಷ್ಣಾ ನದಿಯಿಂದಾಗಿ ಪ್ರವಾಹ ಹೆಚ್ಚಾದರೆ ಸಂಪರ್ಕ ಕಡಿತವಾಗುವ ಭೀತಿ ಇದೆ.

ಕೃಷ್ಣಾ ನದಿಯ ಪ್ರವಾಹಕ್ಕೆ ಕೊಳ್ಳುರು ಸೇತುವೆ ಸಂಪೂರ್ಣ ಜಲಾವೃತ

ಯಾದಗಿರಿ-ರಾಯಚೂರು ಜಿಲ್ಲೆಗೆ ಸಂಪರ್ಕ ಕಲ್ಪಿಸುವ ಕೊಳ್ಳುರು ಸೇತುವೆ ಮುಳುಗಡೆಯಾಗಿದೆ. ಕೃಷ್ಣಾ ನದಿಯ ಪ್ರವಾಹಕ್ಕೆ ಯಾದಗಿರಿ ಜಿಲ್ಲೆಯ ಶಹಾಪುರ ತಾಲೂಕಿನ ಕೊಳ್ಳುರು ಸೇತುವೆಗೆ ಜಲದಿಗ್ಭಂಧನ ಹಾಕಲಾಗಿದೆ. ಕೊಳ್ಳುರು ಸೇತುವೆಯಲ್ಲಿ ಪೊಲೀಸರು ಕಟ್ಟೆಚ್ಚರ ವಹಿಸಿದ್ದಾರೆ. ಕೃಷ್ಣಾ ನದಿಗೆ ಅಡ್ಡಲಾಗಿ ಸೇತುವೆ ಎತ್ತರ ನಿರ್ಮಾಣ ಮಾಡಬೇಕೆಂದು ಬಹು ವರ್ಷಗಳ ಬೇಡಿಕೆ ಇದೆ. ಸಾಕಷ್ಟು ಜನ ಪ್ರತಿನಿಧಿ ಅಧಿಕಾರಿಗಳು ಸೇತುವೆ ಎತ್ತರ ನಿರ್ಮಾಣ ಮಾಡುತ್ತೆವೆಂದು ಕೇವಲ ಭರವಸೆ ನೀಡಿ ಹೋಗಿದ್ದಾರೆ.

ಚಿತ್ರದುರ್ಗದಲ್ಲಿ ಮನೆ ಗೋಡೆ ಕುಸಿದು ಮೇಕೆಗಳು ಸಾವು

ಭಾರಿ ಮಳೆಗೆ ಮನೆ ಗೋಡೆ ಕುಸಿದು 7 ಮೇಕೆಗಳು ಮೃತಪಟ್ಟಿವೆ. ಚಿತ್ರದುರ್ಗದ ಭೀಮಸಮುದ್ರ ಬಳಿ ತೊರೆ ಬಯಲು ಗ್ರಾಮದಲ್ಲಿ ಘಟನೆ ನಡೆದಿದೆ. ತೊರೆ ಬಯಲು ಗ್ರಾಮದ ಜಯಣ್ಣ ಎಂಬುವವರ ಮನೆ ಗೋಡೆ ಕುಸಿದಿದೆ. ಅದೃಷ್ಟವಶಾತ್ ಮನೆಯಲ್ಲಿದ್ದ ಜಯಣ್ಣ ಕುಟುಂಬಸ್ಥರು ಪ್ರಾಣಾಪಾಯದಿಂದ ಪಾರಾಗಿದ್ದಾರೆ. ಆದರೆ ಮನೆ ಗೋಡೆ ಮಣ್ಣಿನಡಿ ಸಿಲುಕಿ ಮೇಕೆಗಳು ಸ್ಥಳದಲ್ಲೇ ಮೃತಪಟ್ಟಿವೆ.

ಕಾರು, ಆಟೋ ಮೇಲೆ ಉರುಳಿ ಬಿದ್ದ ಮರ

ಸಿಲಿಕಾನ್ ಸಿಟಿ ಬೆಂಗಳೂರಿನಲ್ಲಿ ಮರಗಳ ಧರಶಾಹಿ ಮುಂದುವರಿದಿದೆ. ಯಾವುದೇ ಮಳೆ ಇಲ್ಲದೆ ಇದ್ದರೂ ದಿಢೀರ್ ಬೃಹತ್‌ ಗಾತ್ರದ ಮರವೊಂದು ಉರುಳಿದೆ. ಪರಿಣಾಮ 2 ಕಾರುಗಳು, ಆಟೋವೊಂದು ಜಖಂಗೊಂಡಿದೆ. ಕ್ವೀನ್ಸ್ ರಸ್ತೆಯಲ್ಲಿ ಈ ಘಟನೆ ನಡೆದಿದೆ. ಮರ ಬಿದ್ದ ಪರಿಣಾಮ ಆಟೋ ಡ್ರೈವರ್‌ ದಿವಾಕರ್‌, ಪ್ರಯಾಣಿಕ ಸ್ಟಾಲಿನ್ ಎಂಬುವವರು ಗಂಭೀರ ಗಾಯಗೊಂಡಿದ್ದಾರೆ. ಕೂಡಲೇ ಟ್ರಾಫಿಕ್ ಪೊಲೀಸರು ಹಾಗೂ ಸ್ಥಳೀಯರು ಸಹಾಯದಿಂದ ಆಸ್ಪತ್ರೆಗೆ ದಾಖಲು ಮಾಡಿದ್ದಾರೆ. ಮರ ಬಿದ್ದ ಪರಿಣಾಮ ರಸ್ತೆ ಬಂದ್ ಮಾಡಬೇಕಾಯಿತು.

ಮನೆ ಮೇಲೆ ಬಿದ್ದ ತೆಂಗಿನಮರ

ಉತ್ತರಕನ್ನಡ ಜಿಲ್ಲೆಯ ಅಂಕೋಲಾ ಹಾರವಾಡದ ಗಾಬಿತವಾಡದಲ್ಲಿ ಮನೆ ಮೇಲೆ ತೆಂಗಿನ ಮರ ಬಿದ್ದು ಹಾನಿಯಾಗಿದೆ. ಗಾಬಿತವಾಡದ ಆಶಾ ಪಟೇ ಎಂಬುವವರ ಮನೆಯ ಚಾವಣಿ ಕುಸಿದು ಬಿದ್ದಿದೆ. ಅದೃಷ್ಟವಶಾತ್ ಯಾವುದೇ ಪ್ರಾಣಹಾನಿ ಆಗಿಲ್ಲ. ಭಟ್ಕಳದ ಹಾಡುವಳ್ಳಿ ಪಂಚಾಯತ ವ್ಯಾಪ್ತಿಯ ಹೇರಿಬಿಳ್ಳೂರು ಗ್ರಾಮದಲ್ಲಿ ಮಂಜುನಾಥ ನಾಯ್ಕ, ಕುಪ್ಪಯ್ಯ ನಾಯ್ಕ ಸೇರಿ ಹಲವರ ಅಡಿಕೆ ತೋಟಕ್ಕೆ ಹಾನಿಯಾಗಿದೆ. ಅಡಿಕೆ ಮರ ಬಿದ್ದು ಸುಮಾರು 8 ಎಕರೆ ತೋಟಕ್ಕೆ ಹಾನಿಯಾಗಿದೆ.

ಈ ಸಂಗತಿಯ ಕುರಿತು ನಿಮ್ಮ ಅನಿಸಿಕೆ ಏನು? ಕಾಮೆಂಟ್ ಮೂಲಕ ತಿಳಿಸಿ

Continue Reading

ಮಳೆ

Karnataka Rain : ಭಾರಿ ಗಾಳಿ-ಮಳೆಗೆ ಚಲಿಸುತ್ತಿದ್ದ ಬೈಕ್ ಮೇಲೆ ಬಿದ್ದ ಮರ; ಸವಾರ ಸ್ಥಳದಲ್ಲೆ ಸಾವು

Karnataka Rain: ಮಳೆಯು ನಾನಾ ಅವಾಂತರವನ್ನೇ ಸೃಷ್ಟಿಸಿರುವುದು ಮಾತ್ರವಲ್ಲದೇ ಸಾವು-ನೋವಿಗೂ ಕಾರಣವಾಗಿದೆ. ಚಲಿಸುತ್ತಿದ್ದ ಬೈಕ್‌ ಮೇಲೆ ಮರ ಬಿದ್ದು, ಸವಾರ ಸ್ಥಳದಲ್ಲೇ ಮೃತಪಟ್ಟಿದ್ದಾರೆ. ಹಾಸನದಲ್ಲಿ ಕಾರೊಂದು ನೀರಿನಲ್ಲಿ ಸಿಲುಕಿ ಚಾಲಕ ಪರದಾಡುವಂತಾಯಿತು.

VISTARANEWS.COM


on

By

karnataka Rain
Koo

ಶಿವಮೊಗ್ಗ : ಮಲೆನಾಡು ಭಾಗದಲ್ಲಿ ಗಾಳಿ ಜತೆಗೆ ವ್ಯಾಪಕ (Karnataka Rain) ಮಳೆಯಾಗುತ್ತಿದೆ. ಶಿವಮೊಗ್ಗದಲ್ಲಿ ಭಾರಿ ಮಳೆಗೆ ಮರವೊಂದು ಚಲಿಸುತ್ತಿದ್ದ ಬೈಕ್ ಮೇಲೆ ಬಿದ್ದಿದೆ. ಮರ ಬಿದ್ದ ರಭಸಕ್ಕೆ ಬೈಕ್ ಸವಾರ ಸ್ಥಳದಲ್ಲೇ ಮೃತಪಟ್ಟಿದ್ದಾರೆ. ಶಿವಮೊಗ್ಗ ಜಿಲ್ಲೆಯ ತೀರ್ಥಹಳ್ಳಿ ತಾಲೂಕಿನ ಮೀನ್ಮನೆಕೊಪ್ಪ ಗ್ರಾಮದಲ್ಲಿ ಘಟನೆ ನಡೆದಿದೆ. ರಾಮಪ್ಪ (26) ಮೃತ ದುರ್ದೈವಿ.

ಚಿಕ್ಕಮಗಳೂರಲ್ಲಿ ಮೊಬೈಲ್ ಚಾರ್ಜ್ ಮಾಡಲು ಜನರೇಟರ್ ಮೊರೆ!

ಗಾಳಿ ಮಳೆ ಅಬ್ಬರಕ್ಕೆ ಚಿಕ್ಕಮಗಳೂರಿನ ಬಹುತೇಕ ಕಡೆ ವಿದ್ಯುತ್ ಸಂಪರ್ಕ ಕಡಿತಗೊಂಡಿದೆ. ಒಂದು ವಾರದಿಂದ ವಿದ್ಯುತ್ ಇಲ್ಲದೆ ಗ್ರಾಮಸ್ಥರು ಪರದಾಡುತ್ತಿದ್ದಾರೆ. ಕಳಸ,ಮೂಡಿಗೆರೆ, ಶೃಂಗೇರಿ, ಕೊಪ್ಪ, ಚಿಕ್ಕಮಗಳೂರು ತಾಲೂಕು ಹೊರ ಜಗತ್ತಿನೊಂದಿಗೆ ಸಂಪರ್ಕ ಕಳೆದುಕೊಂಡಿದೆ. ಮೊಬೈಲ್ ಚಾರ್ಜ್ ಮಾಡಲು ಹಾಗೂ ಮನೆ ಬಳಕೆಗೆ ಜನರೇಟರ್ ಮೊರೆ ಹೋಗಿದ್ದಾರೆ. ಡೀಸೆಲ್ ಜನರೇಟರ್ ಬಳಸಿ ಮೊಬೈಲ್ ಚಾರ್ಜಿಂಗ್ ಮಾಡಿಕೊಳ್ಳುತ್ತಿದ್ದಾರೆ.

ಕೋಡಿ ಬಿದ್ದು ಅಚ್ಚರಿ ಮೂಡಿಸಿದ ಅಯ್ಯನಕೆರೆ

ನಿನ್ನೆ ಶುಕ್ರವಾರ ಮದಗದ ಕೆರೆ ಕೋಡಿ ಬಿದ್ದ ಬೆನ್ನಲ್ಲೆ ಇಂದು ಶನಿವಾರ ಅಯ್ಯನಕೆರೆ ಕೋಡಿ ಬಿದ್ದಿದೆ. ಚಿಕ್ಕಮಗಳೂರಿನ ಕಡೂರು ತಾಲೂಕಿನ ಸಖರಾಯಪಟ್ಟಣದ ಕೆರೆಗಳು ಕೋಡಿ ಬಿದ್ದು ಜಲಪಾತದಂತೆ ಧುಮ್ಮಿಕ್ಕಿ ಹರಿಯುತ್ತಿದೆ. ಇನ್ನೂ ಶನಿವಾರವೇ ಅಯ್ಯನಕೆರೆ ಕೋಡಿ ಬೀಳುವುದು ಪ್ರತೀತಿ. ಮತ್ತೆ ಶನಿವಾರವೇ ಕೋಡಿಬಿದ್ದು ಅಚ್ಚರಿ ಮೂಡಿಸಿದೆ. ಹತ್ತಾರು ಹಳ್ಳಿ, ಸಾವಿರಾರು ಎಕರೆ ಜಮೀನು, ಜನ-ಜಾನುವರಗಳಿಗೆ ಆಶ್ರಯವಾಗಿದೆ.

ಇನ್ನೂ ಕಡೂರು ತಾಲೂಕಿನ ಐತಿಹಾಸಿಕ ಮದಗದ ಕೆರೆ ಕೋಡಿ ಬಿದ್ದು ಭಾರೀ ಪ್ರಮಾಣದ ನೀರು ಹರಿದುಹೋಗಿದೆ. ಕೋಡಿ ಬಿದ್ದ ಕೆರೆ ನೀರಿನಿಂದ ಹೊಲಗದ್ದೆ-ತೋಟಗಳು ಜಲಾವೃತಗೊಂಡಿದೆ. ಇತ್ತ ಸೇತುವೆಗಳು ಜಲಾವೃತಗೊಂಡು ಹಳ್ಳಿಗಳ‌ ಸಂಪರ್ಕ ಕಡಿತಗೊಂಡಿದೆ. ನೀರಿನ ವೇಗಕ್ಕೆ ವಿದ್ಯುತ್ ಕಂಬಗಳು ಮುರಿದು ಬಿದ್ದಿವೆ.

ಇತ್ತ ಭದ್ರಾ ನದಿ ಅಬ್ಬರಕ್ಕೆ ರಾಜ್ಯ ಹೆದ್ದಾರಿ ಜಲಾವೃತಗೊಂಡಿದೆ. ಬಾಳೆಹೊನ್ನೂರು-ಕೊಟ್ಟಿಗೆಹಾರ- ಕಳಸ ಸಂಪರ್ಕಿಸುವ ಹೆದ್ದಾರಿ ರಸ್ತೆಯಲ್ಲಿ ನೀರು ಏರಿಕೆ ಆಗುತ್ತಿದೆ. ಬಾಳೆಹೊನ್ನೂರು ಕಳಸ ರಾಜ್ಯ ಹೆದ್ದಾರಿ ಸಂಪರ್ಕ ಕಡಿತಗೊಂಡಿದೆ.

ಇದನ್ನೂ ಓದಿ:Ramanagar News : ರಾಮನಗರದಲ್ಲಿ ಎರಡು ಜಡೆ ಹಾಕಿಲ್ಲವೆಂದು ವಿದ್ಯಾರ್ಥಿನಿಯರ ಕೂದಲು ಕತ್ತರಿಸಿದ ಶಿಕ್ಷಕರು ಅಮಾನತು

ತೆಪ್ಪದಲ್ಲಿ ತೆರಳಿದ ಲೈನ್‌ಮ್ಯಾನ್‌

ಚಿಕ್ಕಮಗಳೂರಿನಲ್ಲಿ ಮಳೆಯ ಆರ್ಭಟಕ್ಕೆ ವಿದ್ಯುತ್ ಅಸ್ತವ್ಯಸ್ತಗೊಂಡಿದೆ. ವಿದ್ಯುತ್ ಲೈನ್ ಸರಿಪಡಿಸಲು ಮೆಸ್ಕಾಂ ಸಿಬ್ಬಂದಿ ಪ್ರಾಣ ಪಣಕಿಟ್ಟು ಕೆಲಸ ಮಾಡುತ್ತಿದ್ದಾರೆ. ಉಕ್ಕಿ ಹರಿಯುವ ನೀರಿನಲ್ಲಿ ತೆಪ್ಪದಲ್ಲಿ ತೆರಳಿ ವಿದ್ಯುತ್ ಲೈನ್ ಸರಿಪಡಿಸಿದ್ದಾರೆ. ಬಾಳೆಹೊನ್ನೂರು-ಗಡಿಗೇಶ್ವರದ ಬಳಿ ವಿದ್ಯುತ್ ತಂತಿಗಳು ಹೊಳೆಯಲ್ಲಿ ಮುಳುಗಿ ಹೋಗಿದೆ. ಜೆ.ಇ ಗಣೇಶ್, ಕಾಂತರಾಜು, ಶಿವಕುಮಾರ್ ಸರಿಪಡಿಸುತ್ತಿದ್ದಾರೆ. ಮಲೆನಾಡಲ್ಲಿ ವಿದ್ಯುತ್ ಸಂಪರ್ಕ ಸರಿಪಡಿಸುವುದೇ ದೊಡ್ಡ ಸಾಹಸವಾಗಿದೆ. ಜಿಲ್ಲೆಯಾದ್ಯಂತ 2,400ಕ್ಕೂ ಹೆಚ್ಚು ವಿದ್ಯುತ್ ಕಂಬಗಳು ಧರಾಶಾಹಿಯಾಗಿವೆ.

ಮರ ಬಿದ್ದು ಮನೆ ಜಖಂ

ಕೊಡಗು ಜಿಲ್ಲೆಯಲ್ಲಿ ಭಾರಿ ಗಾಳಿಗೆ ಸುಂಟಿಕೊಪ್ಪದ ಪನ್ಯ ಬಳಿ ಸಿಲ್ವರ್‌ ಮರ ಧರೆಗುರುಳಿತ್ತು. ಇದರಿಂದಾಗಿ ಸುಂಟಿಕೊಪ್ಪ ಮಾದಾಪುರ ಸೋಮವಾರಪೇಟೆ ರಸ್ತೆ ಬಂದ್ ಆಗಿತ್ತು. ಮಡಿಕೇರಿ ಹೊರವಲಯದ ಕರ್ಣಗೇರಿಯಲ್ಲಿ ಮರ ಬಿದ್ದು ಮನೆ ಸಂಪೂರ್ಣ ಹಾನಿಯಾಗಿತ್ತು. ಗ್ರಾಮದ ಹೇಮಾವತಿ ಎಂಬುವರಿಗೆ ಸೇರಿದ ವಾಸದ ಮನೆ ಜಖಂಗೊಂಡಿತ್ತು.

ನೀರಿನಲ್ಲಿ ಸಿಲುಕಿದ ಕಾರು

ಹಾಸನ ಜಿಲ್ಲೆಯಲ್ಲಿ ಮಳೆಯ ಅಬ್ಬರ ಮುಂದುವರಿದಿದ್ದು, ತಡರಾತ್ರಿ ನೀರಿನಲ್ಲಿ ಕಾರುವೊಂದು ಸಿಲುಕಿತ್ತು. ನೀರಿನಲ್ಲಿ ಸಿಲುಕಿ ಕಾರು ಚಾಲಕ ಪರದಾಡಿದರು. ಬೇಲೂರು ತಾಲೂಕಿನ ಬಿರಡಹಳ್ಳಿ ಗ್ರಾಮದ ಬಳಿ ಘಟನೆ ನಡೆದಿದೆ. ಕೂಡಲೇ ಸ್ಥಳೀಯರು ಸ್ಥಳಕ್ಕೆ ಬಂದು ವ್ಯಕ್ತಿಯನ್ನು ರಕ್ಷಿಸಿದ್ದಾರೆ. ಮತ್ತೊಂದು ವಾಹನ ತಂದು ನೀರಿನಲ್ಲಿ ಸಿಲುಕಿದ್ದ ಕಾರನ್ನು ಹೊರಗೆ ಎಳೆದು ತಂದರು. ಬಿರಡಹಳ್ಳಿ ಬಳಿಯ ಸೇತುವೆ ಮುಳುಗಡೆಯಾಗಿ ಸುಮಾರು ಹದಿನೈದು ಗ್ರಾಮಗಳಿಗೆ ರಸ್ತೆ ಸಂಪರ್ಕ ಕಡಿತಗೊಂಡಿತ್ತು. ಸಕಲೇಶಪುರದ ತಾಲೂಕಿನ ಹಾನುಬಾಳು ಹೋಬಳಿಯಲ್ಲಿ ರಸ್ತೆ ಜಲಾವೃತಗೊಂಡು ಹಾನುಬಾಳು-ವೆಂಕಟಹಳ್ಳಿ-ರಾಗಿಗುಂಡಿ-ಅಗ್ನಿ ರಸ್ತೆ ಸಂಪರ್ಕ ಕಡಿತಗೊಂಡಿತ್ತು. ಇತ್ತ ಸಕಲೇಶಪುರ ಹೊಳೆಮಲ್ಲೇಶ್ವರ ದೇಗುಲ ಜಲಾವೃತಗೊಂಡಿತ್ತು. ಗರ್ಭಗುಡಿಯೊಳಗೆ ಅಪಾರ ಪ್ರಮಾಣದ ನೀರು ನುಗ್ಗಿತ್ತು.

ಈ ಸಂಗತಿಯ ಕುರಿತು ನಿಮ್ಮ ಅನಿಸಿಕೆ ಏನು? ಕಾಮೆಂಟ್ ಮೂಲಕ ತಿಳಿಸಿ

Continue Reading

ಮಳೆ

Karnataka Rain : ಕಾವೇರಿ ನದಿ ತೀರದಲ್ಲಿ ಪ್ರವಾಹ ಭೀತಿ; ಮುತ್ತತ್ತಿಗೆ ಪ್ರವಾಸಿಗರ ನಿಷೇಧ, ಶ್ರೀರಂಗಪಟ್ಟಣದಲ್ಲಿ ಪಿಂಡ ಪ್ರದಾನಕ್ಕೆ ಬ್ರೇಕ್

Mandya News : ಮಂಡ್ಯ ಸುತ್ತಮುತ್ತ ಭಾರಿ ಮಳೆಯಾಗುತ್ತಿದ್ದು (Karnataka Rain) , ಕಾವೇರಿ ನದಿ ಉಕ್ಕಿ (Cauvery River) ಹರಿಯುತ್ತಿದೆ. ಹೀಗಾಗಿ ನದಿ ಪಾತ್ರದ ಜನರು ಎಚ್ಚರಿಕೆಯಿಂದ ಇರುವಂತೆ ಸೂಚನೆ ನೀಡಲಾಗಿದೆ. ಇದರೊಟ್ಟಿಗೆ ಪ್ರವಾಸಿ ತಾಣಗಳಾದ ಮುತ್ತತ್ತಿ ಹಾಗೂ ನಿಮಿಷಾಂಬ ದೇಗುಲದ ಸ್ನಾನ ಘಟ್ಟಕ್ಕೆ ನಿಷೇಧ ಹೇರಲಾಗಿದೆ. ಜತೆಗೆ ಶ್ರೀರಂಗಪಟ್ಟಣದಲ್ಲಿ ಪಿಂಡ ಪ್ರದಾನಕ್ಕೆ ಬ್ರೇಕ್‌ ಹಾಕಲಾಗಿದೆ.

VISTARANEWS.COM


on

By

karnataka rain
Koo

ಮಂಡ್ಯ: ಭಾರಿ ಮಳೆಯಿಂದಾಗಿ (Karnataka Rain) ಕಾವೇರಿ ನದಿಯಲ್ಲಿ ನಿರೀಕ್ಷೆಗೂ ಮೀರಿ ನೀರಿನ ಪ್ರಮಾಣ ಹರಿಯುತ್ತಿದೆ. ಹೀಗಾಗಿ ಮುನ್ನೆಚ್ಚರಿಕಾ ಕ್ರಮವಾಗಿ ಮಂಡ್ಯ ಜಿಲ್ಲೆಯ ಮಳವಳ್ಳಿ ತಾಲೂಕಿನ ಹಲಗೂರು ಸಮೀಪದ ಮುತ್ತತ್ತಿಗೆ (muthathi temple) ಪ್ರವಾಸಿಗರು, ಭಕ್ತರ ಪ್ರವೇಶಕ್ಕೆ ನಿಷೇಧ ಹೇರಲಾಗಿದೆ.

ಕೆಆರ್‌ಎಸ್‌ನಿಂದ 1.22 ಲಕ್ಷ ಕ್ಯೂಸೆಕ್ ನೀರನ್ನು ಕಾವೇರಿ ನದಿಗೆ ಬಿಡುಗಡೆ ಮಾಡಲಾಗುತ್ತಿದೆ. ಪ್ರವಾಹ ಮುನ್ನೆಚ್ಚರಿಕೆ ಕ್ರಮವಾಗಿ ಮುತ್ತತ್ತಿಗೆ ಪ್ರವಾಸಿಗರಿಗೆ ನಿಷೇಧಾಜ್ಞೆ ಜಾರಿ ಮಾಡಿ ಮಳವಳ್ಳಿ ತಹಸೀಲ್ದಾರ್ ಕೆ.ಎನ್ ಲೋಕೇಶ್ ಆದೇಶ ಹೊರಡಿಸಿದ್ದಾರೆ. ಪ್ರವಾಹ ಕಡಿಮೆಯಾಗುವವರೆಗೂ ನಿಷೇಧ ಜಾರಿಯಲ್ಲಿ ಇರಲಿದೆ. ಹೀಗಾಗಿ ಪೊಲೀಸರು ಕಾವೇರಿ ನದಿ ದಡದಲ್ಲಿ ಅಪಾಯದ ಸೂಚನಾ ಫಲಕ ಹಾಕಿದ್ದಾರೆ.

ಇದನ್ನೂ ಓದಿ: land slide : ಎಡಕುಮೇರಿಯಲ್ಲಿ ರೈಲ್ವೆ ಹಳಿ ಮೇಲೆ ಗುಡ್ಡ ಕುಸಿತ; ಜು.29ರವರೆಗೆ ಎಕ್ಸ್‌ಪ್ರೆಸ್‌ ರೈಲುಗಳ ಓಡಾಟ ರದ್ದು

ಶ್ರೀರಂಗಪಟ್ಟಣದಲ್ಲಿ ಪಿಂಡ ಪ್ರದಾನಕ್ಕೆ ಬ್ರೇಕ್

ಕಾವೇರಿ ‌ನದಿ ಉಕ್ಕಿ ಹರಿಯುತ್ತಿದ್ದು, ಪ್ರವಾಹ ಸೃಷ್ಟಿಯಾಗಿದೆ. ಹೀಗಾಗಿ ಶ್ರೀರಂಗಪಟ್ಟಣದಲ್ಲಿ ಪಿಂಡ ಪ್ರದಾನಕ್ಕೆ ಬ್ರೇಕ್ ಹಾಕಲಾಗಿದೆ. ನದಿಗೆ ಇಳಿಯದಂತೆ ಜಿಲ್ಲಾಡಳಿತ ಕಬ್ಬಿಣದ ರಾಡ್‌ಗಳನ್ನು ಬಳಸಿ ತಡೆಗೋಡೆ‌ ನಿರ್ಮಿಸಿದೆ. ನಿತ್ಯ ನೂರಾರು ಸಂಖ್ಯೆಯಲ್ಲಿ ಬಂದು ತಮ್ಮ‌ಪೂರ್ವಿಕರು, ಸಂಬಂಧಿಕರ ಅಸ್ತಿ ವಿಸರ್ಜನೆ ಜತೆಗೆ ಪಿಂಡ ಪ್ರಧಾನ ಮಾಡುತ್ತಿದ್ದರು. ಈಗ ಕಾವೇರಿ‌ ನದಿಯಲ್ಲಿ ಪ್ರವಾಹ ಹಿನ್ನೆಲೆ ನದಿ ದಂಡೆಯಲ್ಲಿ ಕುಳಿತು ಪೂಜೆ ಮಾಡುವ ಅವಕಾಶ ಇಲ್ಲ. ಜನರು ಪಿಂಡ ಪ್ರದಾನಕ್ಕೆ ಬಂದು ವಾಪಸ್‌ ಹೋಗುತ್ತಿದ್ದಾರೆ.

ನಿಮಿಷಾಂಭ ದೇಗುಲದ ಸ್ನಾನ ಘಟ್ಟಕ್ಕೆ ಭಕ್ತರಿಗೆ ನಿರ್ಬಂಧ

ನಿಮಿಷಾಂಭ ದೇಗುಲದ ಭಕ್ತರಿಗೂ ಕಾವೇರಿ ಪ್ರವಾಹ ಬಿಸಿ ತಟ್ಟಿದೆ. ಕೆಆರ್‌ಎಸ್‌ನಿಂದ ನದಿಗೆ ಅಧಿಕ ನೀರು ಬಿಡುಗಡೆ ಮಾಡುತ್ತಿರುವುದರಿಂದ ಪ್ರಸಿದ್ಧ ನಿಮಿಷಾಂಭ ದೇವಾಲಯದ ಬಳಿ ಪ್ರವಾಹದ ಆತಂಕ ಎದುರಾಗಿದೆ. ಪ್ರವಾಹ ಹಿನ್ನೆಲೆಯಲ್ಲಿ ಕಾವೇರಿ ನದಿಗೆ ಇಳಿಯದಂತೆ ಭಕ್ತರಿಗೆ ಸೂಚನೆ ನೀಡಲಾಗಿದೆ. ದೇವಸ್ಥಾನದ ಬಳಿಯ ಸ್ನಾನ ಘಟ್ಟಕ್ಕೆ ಭಕ್ತರಿಗೆ ನಿರ್ಬಂಧ ಹೇರಲಾಗಿದೆ.

ರಂಗನತಿಟ್ಟು ಪಕ್ಷಿಧಾಮ ವಾಕಿಂಗ್‌ ಪಾಥ್‌ ಮುಳುಗಡೆ

ಮಂಡ್ಯ ಜಿಲ್ಲೆಯ ಪ್ರವಾಸಿ ತಾಣಗಳಿಗೆ ಪ್ರವಾಹ ಭೀತಿ ಎದುರಾಗಿದೆ. ಅಪಾಯದ ಮಟ್ಟ ಮೀರಿ ಹರಿಯುತ್ತಿರು ಕಾವೇರಿ ನದಿಯಿಂದಾಗಿ ರಂಗನತಿಟ್ಟು ಪಕ್ಷಿಧಾಮಕ್ಕೆ ಜಲ ದಿಗ್ಭಂದನ ಹಾಕಲಾಗಿದೆ. ಮಂಡ್ಯ ಜಿಲ್ಲೆಯ ಶ್ರೀರಂಗಪಟ್ಟಣ ತಾಲೂಕಿನ ರಂಗನತಿಟ್ಟು ಪಕ್ಷಿಧಾಮಕ್ಕೆ ಕಾವೇರಿ ನೀರು ನುಗ್ಗಿದೆ. ಇದರಿಂದಾಗಿ ವಾಕಿಂಗ್ ಪಾಥ್, ಅರಣ್ಯ ಇಲಾಖೆ ಕಚೇರಿ ಜಲಾವೃತಗೊಂಡಿದೆ. ಈಗಾಗಲೇ ‌ಪಕ್ಷಿಧಾಮಕ್ಕೆ ಪ್ರವಾಸಿಗರ ನಿರ್ಬಂಧ ಹೇರಲಾಗಿದೆ. ಜತೆಗೆ ಬೋಟಿಂಗ್ ವ್ಯವಸ್ಥೆ ಕೂಡ ಸ್ಥಗಿತ ಮಾಡಲಾಗಿದೆ.

ಈ ಸಂಗತಿಯ ಕುರಿತು ನಿಮ್ಮ ಅನಿಸಿಕೆ ಏನು? ಕಾಮೆಂಟ್ ಮೂಲಕ ತಿಳಿಸಿ

Continue Reading

ಪ್ರಮುಖ ಸುದ್ದಿ

Bangalore Mysore Expressway: ಬೆಂಗಳೂರು- ಮೈಸೂರು ಹೈವೇಯಲ್ಲಿ ಓವರ್‌ಸ್ಪೀಡ್‌ ಹೋದರೆ ಬೀಳಲಿದೆ ಪೊಲೀಸ್‌ ಕೇಸ್!‌

Bangalore Mysore Expressway: ನಿನ್ನೆ ಮೈಸೂರು ಬೆಂಗಳೂರು ಹೈವೇ ಸಿಸಿಟಿವಿಗಳನ್ನು ಸಂಚಾರಿ ಮತ್ತು ರಸ್ತೆ ಸುರಕ್ಷತೆ ಎಡಿಜಿಪಿ ಅಲೋಕ್ ಕುಮಾರ್ ಪರಿಶೀಲನೆ ಮಾಡಿದ್ದರು. ಪರಿಶೀಲನೆ ವೇಳೆ ಒಂದೇ ದಿನ‌ 150ಕ್ಕೂ ಹೆಚ್ಚು ಅತಿ ವೇಗದ ಚಾಲನೆ ಕೇಸ್‌ಗಳು ಪತ್ತೆಯಾಗಿವೆ. ಇದರಿಂದ ಓವರ್‌ಸ್ಪೀಡ್‌ಗೆ ಬ್ರೇಕ್ ಹಾಕಲು ಎಡಿಜಿಪಿ ಅಲೋಕ್ ಕುಮಾರ್ ಹೊಸ ಅಸ್ತ್ರ ಕೈಗೆತ್ತಿಕೊಂಡಿದ್ದು, ಆಗಸ್ಟ್‌ 1ರಿಂದ ಅದನ್ನು ಚಲಾಯಿಸಲಿದ್ದಾರೆ.

VISTARANEWS.COM


on

bangalore mysore highway
Koo

ಬೆಂಗಳೂರು: ಇನ್ನು ಮುಂದೆ ಬೆಂಗಳೂರು- ಮೈಸೂರು ಎಕ್ಸ್‌ಪ್ರೆಸ್‌ವೇಯಲ್ಲಿ (Bangalore Mysore Expressway) ಓವರ್‌ಸ್ಪೀಡ್‌ನಲ್ಲಿ (Overspeed) ಚಲಾಯಿಸುವವರು ಹುಷಾರಾಗಿರಬೇಕು. ರ್ಯಾಶ್‌ ಡ್ರೈವಿಂಗ್‌ (Rash Driving) ಮಾಡುವವರು ಕಂಬಿ ಎಣಿಸುವ ದಿನಗಳು ಬಂದಿವೆ. ಹೈವೇಯಲ್ಲಿ ಹಿಡಿಯೋರಿಲ್ಲ ಎಂದು ಓವರ್‌ಸ್ಪೀಡ್ ಹೋದರೆ ನಿಮ್ಮ ಮೇಲೆ ಎಫ್‌ಐಆರ್‌ (FIR) ದಾಖಲಾಗಲಿದೆ.

ಬೆಂಗಳೂರು-ಮೈಸೂರು ಹೈವೇಯಲ್ಲಿ ಟ್ರಾಫಿಕ್‌ ಪೊಲೀಸರು ಹಲವು ಕ್ರಮಗಳನ್ನು ಕೈಗೊಂಡಿದ್ದರೂ ರ್ಯಾಶ್ ಡ್ರೈವಿಂಗ್ ನಿಲ್ಲುತ್ತಿಲ್ಲ. 130 ಕಿಮೀಗೂ ಅಧಿಕ ಸ್ಪೀಡ್‌ನಲ್ಲಿ ವಾಹನಗಳು ಸಂಚರಿಸುತ್ತಿವೆ. ಇಂಟರ್‌ಸೆಪ್ಟರ್‌ಗಳು ಇದ್ದರೂ ಹಲವರು ಕ್ಯಾರೇ ಮಾಡುತ್ತಿಲ್ಲ. ಹೀಗಾಗಿ ಅಪಘಾತಗಳಾಗುತ್ತಿವೆ. ಅತಿ ವೇಗದ ಚಾಲನೆಯಿಂದಲೇ 90%ರಷ್ಟು ಅಪಘಾತಗಳು ಸಂಭವಿಸುತ್ತಿವೆ. ಹೀಗಾಗಿ ಅತಿ ವೇಗದಲ್ಲಿ ಚಾಹನ ಚಲಾಯಿಸುವವರ ವಿರುದ್ಧ ಕೇಸ್ ದಾಖಲು ಮಾಡಲು ಪೊಲೀಸರು ಮುಂದಾಗಿದ್ದಾರೆ.

ನಿನ್ನೆ ಮೈಸೂರು ಬೆಂಗಳೂರು ಹೈವೇ ಸಿಸಿಟಿವಿಗಳನ್ನು ಸಂಚಾರಿ ಮತ್ತು ರಸ್ತೆ ಸುರಕ್ಷತೆ ಎಡಿಜಿಪಿ ಅಲೋಕ್ ಕುಮಾರ್ ಪರಿಶೀಲನೆ ಮಾಡಿದ್ದರು. ಪರಿಶೀಲನೆ ವೇಳೆ ಒಂದೇ ದಿನ‌ 150ಕ್ಕೂ ಹೆಚ್ಚು ಅತಿ ವೇಗದ ಚಾಲನೆ ಕೇಸ್‌ಗಳು ಪತ್ತೆಯಾಗಿವೆ. ಇದರಿಂದ ಓವರ್‌ಸ್ಪೀಡ್‌ಗೆ ಬ್ರೇಕ್ ಹಾಕಲು ಎಡಿಜಿಪಿ ಅಲೋಕ್ ಕುಮಾರ್ ಹೊಸ ಅಸ್ತ್ರ ಕೈಗೆತ್ತಿಕೊಂಡಿದ್ದು, ಆಗಸ್ಟ್‌ 1ರಿಂದ ಅದನ್ನು ಚಲಾಯಿಸಲಿದ್ದಾರೆ.

ಮಿತಿ ಮೀರಿದ ವೇಗದಿಂದ ಚಾಲನೆ ಮಾಡುವವರ ವಿರುದ್ಧ ಎಫ್ಐಆರ್ ದಾಖಲಿಸಲಾಗುತ್ತದೆ. ಸ್ಪೀಡ್‌ನಲ್ಲಿ 130 ಕಿಮೀ ದಾಟಿದರೆ ಎಫ್ಐಆರ್ ದಾಖಲಾಗಲಿದೆ. ನಂತರ ಚಾಲಕರ ಮೇಲೆ ಕಾನೂನು ಕ್ರಮ ಕೈಗೊಳ್ಳಲಾಗುತ್ತದೆ. ವಾಹನ ಚಾಲನೆ ಪರವಾನಗಿಯೂ ರದ್ದಾಗಬಹುದು. ಹೀಗೆಂದು ಎಕ್ಸ್ ಖಾತೆ ಮೂಲಕ ಅಲೋಕ್ ಕುಮಾರ್ ಮಾಹಿತಿ ಹಂಚಿಕೊಂಡಿದ್ದಾರೆ.

ಹೆದ್ದಾರಿಯಲ್ಲಿ ಸ್ಮಾರ್ಟ್‌ ಟ್ರಾಫಿಕ್‌ ಮ್ಯಾನೇಜ್‌ಮೆಂಟ್

ವಾಹನ ಸಂಚಾರ ನಿಯಮ ಉಲ್ಲಂಘನೆ ಹಾಗೂ ರಸ್ತೆ ಅಪಘಾತಗಳ ತಡೆಗಾಗಿ ಸಂಚಾರ ಪೊಲೀಸ್‌ ವಿಭಾಗ, ಅತ್ಯಾಧುನಿಕ ತಂತ್ರಜ್ಞಾನ ಬಳಸಿಕೊಳ್ಳುತ್ತಿದೆ. ಇದರ ಭಾಗವಾಗಿ ಜುಲೈ 1ರಿಂದ ಬೆಂಗಳೂರು-ಮೈಸೂರು ಎಕ್ಸ್‌ಪ್ರೆಸ್‌ ವೇನಲ್ಲಿ (Bangalore–Mysore Expressway) ಇಂಟೆಲಿಜೆಂಟ್ ಟ್ರಾಫಿಕ್ ಮ್ಯಾನೇಜ್‌ಮೆಂಟ್ ಸಿಸ್ಟಮ್‌ (ITMS) ಅಳವಡಿಸಲಾಗಿದೆ.

ಈ ಮಾರ್ಗದಲ್ಲಿ ಸಂಚಾರ ನಿಯಮ ಉಲ್ಲಂಘನೆ ದಂಡವನ್ನು ನೇರವಾಗಿ ಫಾಸ್ಟ್ಯಾಗ್‌ ಖಾತೆಯಿಂದಲೇ ಕಡಿತಗೊಳಿಸಲು ಪೊಲೀಸರು ಮುಂದಾಗಿದ್ದಾರೆ. ಕ್ಯಾಮೆರಾಗಳು, ಸ್ಪೀಡ್‌ ಗನ್‌ಗಳು ಸಂಚಾರ ನಿಯಮ ಉಲ್ಲಂಘಿಸುವವರ ವಿರುದ್ಧ ತ್ವರಿತ ಕ್ರಮ ಕೈಗೊಳ್ಳಲು ನೆರವಾಗಲಿವೆ. ಜುಲೈ 1ರಿಂದ ಮೈಸೂರು-ಬೆಂಗಳೂರು ಹೆದ್ದಾರಿಯು ಸಂಪೂರ್ಣವಾಗಿ ಕ್ರಿಯಾತ್ಮಕ ಐಟಿಎಂಎಸ್ ಕಾರಿಡಾರ್ (ITMS Corridor) ಆಗಲಿದೆ ಎಂದು ಕರ್ನಾಟಕ ಸಂಚಾರ ಮತ್ತು ರಸ್ತೆ ಸುರಕ್ಷತೆಯ ಎಡಿಜಿಪಿ ಅಲೋಕ್ ಕುಮಾರ್ ಇತ್ತೀಚೆಗೆ ತಿಳಿಸಿದ್ದರು.

ಐಟಿಎಂಎಸ್ ಅಥವಾ ಇಂಟೆಲಿಜೆಂಟ್ ಟ್ರಾಫಿಕ್ ಮ್ಯಾನೇಜ್‌ಮೆಂಟ್ ಸಿಸ್ಟಮ್ ಅನ್ನು ಡಿಸೆಂಬರ್ 2022ರಲ್ಲಿ ಬೆಂಗಳೂರಿನಲ್ಲಿ ಚಾಲನೆಗೆ ತರಲಾಯಿತು. ಅದಕ್ಕಾಗಿ 250 ಸ್ವಯಂಚಾಲಿತ ನಂಬರ್ ಪ್ಲೇಟ್ ರೆಕಗ್ನಿಷನ್ (ಎಎನ್‌ಪಿಆರ್) ಕ್ಯಾಮೆರಾಗಳು ಮತ್ತು 80 ರೆಡ್ ಲೈಟ್ ಉಲ್ಲಂಘನೆ ಪತ್ತೆ (ಆರ್‌ಎರ್‌ವಿಡಿ) ಕ್ಯಾಮೆರಾಗಳನ್ನು ನಗರದ 50 ಜಂಕ್ಷನ್ ಗಳಲ್ಲಿ ಅಳವಡಿಸಲಾಗಿದೆ. ಈಗ ಐಟಿಎಂಎಸ್ ಅಡಿಯಲ್ಲಿ ಸ್ವಯಂಚಾಲಿತ ನಂಬರ್ ಪ್ಲೇಟ್ ರೆಕಗ್ನಿಷನ್ ಕ್ಯಾಮೆರಾಗಳನ್ನು ಮೈಸೂರಿನ ಪ್ರಮುಖ ರಸ್ತೆಗಳಲ್ಲಿ 8.5 ಕೋಟಿ ರೂ. ಅಂದರೆ ಮೈಸೂರು ನಗರಕ್ಕೆ ರೂಪಾಯಿ 4 ಕೋಟಿ ಮತ್ತು ಮೈಸೂರು ಜಿಲ್ಲೆಗೆ ರೂ.4.5 ಕೋಟಿ ಅಂದಾಜು ವೆಚ್ಚದಲ್ಲಿ ಅಳವಡಿಸಲಾಗಿದೆ. ಅಲ್ಲದೇ ಜುಲೈ 1ರಿಂದ ಟ್ರಾಫಿಕ್ ರೂಲ್ಸ್ ಬ್ರೇಕ್ ಮಾಡಿದ ವಾಹನ ಚಾಲಕರಿಗೆ ಚಲನ್ ನೀಡುವ ಪ್ರಕ್ರಿಯೆ ಆರಂಭವಾಗಲಿದೆ ಎಂದು ಮಾಹಿತಿ ನೀಡಿದ್ದರು.

ಅಲ್ಲದೇ ಕ್ಯಾಮೆರಾಗಳನ್ನು ಮೈಸೂರು ಜಿಲ್ಲೆಯ ಹುಣಸೂರು, ಎಚ್ ಡಿ ಕೋಟೆ, ನಂಜನಗೂಡು ಮತ್ತು ಟಿ ನರಸೀಪುರದಂತಹ ಹಲವಾರು ಪ್ರದೇಶಗಳಲ್ಲಿ ಅಳವಡಿಸಲಾಗುವುದು. ಹಾಗಾಗಿ ರೂಲ್ಸ್ ಬ್ರೇಕ್ ಮಾಡಿದ ವಾಹನ ಚಾಲಕರಿಗೆ ಸರಿಯಾದ ಸಮಯಕ್ಕೆ ಎಸ್ ಎಂಎಸ್ ಕಳುಹಿಸಲಾಗುವುದು ಎಂದು ಅವರು ಹೇಳಿದ್ದರು.
ಹೆಚ್ಚುವರಿಯಾಗಿ ಈ ವರ್ಷ ಬೆಂಗಳೂರಿನಿಂದ ಹತ್ತಿರದ ತಾಲೂಕುಗಳು ಮತ್ತು ಜಿಲ್ಲೆಗಳಿಗೆ ಸಂಪರ್ಕಿಸುವ ನಾಲ್ಕು ಪ್ರಮುಖ ಹೆದ್ದಾರಿಗಳಲ್ಲಿ (ತುಮಕೂರು ರಸ್ತೆ, ಕನಕಪುರ ರಸ್ತೆ, ಹೊಸೂರು ರಸ್ತೆ ಮತ್ತು ಹೊಸಕೋಟೆ) ಐಟಿಎಂಎಸ್ ಕ್ಯಾಮೆರಾಗಳನ್ನು ಅಳವಡಿಸಲು ಎಡಿಜಿಪಿ ಪ್ರಸ್ತಾಪಿದ್ದಾರೆ ಎಂಬುದಾಗಿ ತಿಳಿದುಬಂದಿದೆ.

ಐಟಿಎಂಎಸ್ ಕ್ಯಾಮೆರಾಗಳ ಜೊತೆಗೆ ಅವರು ಈ ರಸ್ತೆಗಳಲ್ಲಿ ವೇರಿಯಬಲ್ ಮೆಸೇಜಿಂಗ್ ಚಿಹ್ನೆಗಳನ್ನು ಸೇರಿಸಲು ಯೋಜಿಸುತ್ತಿದ್ದಾರೆ ಎನ್ನಲಾಗಿದೆ. ಈ ಸೈನ್ ಬೋರ್ಡ್ ಗಳು ಸರಿಯಾದ ಸಮಯಕ್ಕೆ ಟ್ರಾಫಿಕ್ ಪರಿಸ್ಥಿತಿಯ ಕುರಿತು ಡಿಜಿಟಲ್ ಸಂದೇಶವನ್ನು ಪ್ರದರ್ಶಿಸುತ್ತದೆ. ಈ ಪ್ರಸ್ತಾವನೆಯನ್ನು ರಾಜ್ಯ ರಸ್ತೆ ಸಾರಿಗೆ ಪ್ರಾಧಿಕಾರವು ಅನುಮೋದಿಸಿದ್ದು, ಜುಲೈನಲ್ಲಿ ಟೆಂಡರ್ ಶುರುವಾಗಲಿದೆ. ಗದಗ ಪಟ್ಟಣದಲ್ಲಿಯೂ ಐಟಿಎಂಎಸ್ ಯೋಜನೆಯನ್ನು ಕೈಗೆತ್ತಿಕೊಳ್ಳಲಾಗಿದೆ. ಈ ಬಗ್ಗೆ ಜೂನ್ 1ರಂದು ರಾಜ್ಯ ಪೊಲೀಸ್ ನ ಸಂಚಾರ ಮತ್ತು ರಸ್ತೆ ಸುರಕ್ಷತಾ ವಿಭಾಗವು ಪ್ರಾದೇಶಿಕ ಎನ್ ಹೆಚ್ಎಐ ಅಧಿಕಾರಿಯೊಂದಿಗೆ ಸಭೆ ನಡೆಸಿತ್ತು. ಹಾಗೇ ಎಡಿಜಿಪಿ ಅವರು ಈ ಬಗ್ಗೆ ರಸ್ತೆ ಸಾರಿಗೆ ಮತ್ತು ಹೆದ್ದಾರಿ ಸಚಿವಾಲಯಕ್ಕೆ ಪತ್ರ ಬರೆಯುವ ಚಿಂತನೆ ಕೂಡ ನಡೆಸುತ್ತಿದ್ದಾರೆ ಎನ್ನಲಾಗಿದೆ.

ಇದನ್ನೂ ಓದಿ: Robbery Case: ಬೆಂಗಳೂರು- ಮೈಸೂರು ದಶಪಥದಲ್ಲಿ ಲಾಂಗ್‌ ತೋರಿಸಿ ಸುಲಿಗೆ

Continue Reading
Advertisement
HD Kumaraswamy
ಪ್ರಮುಖ ಸುದ್ದಿ12 mins ago

HD Kumaraswamy: ರಾಜ್ಯದಲ್ಲಿ ನಾಳೆ ಚುನಾವಣೆ ನಡೆದ್ರೂ ಕಾಂಗ್ರೆಸ್‌ ಮನೆಗೆ; ಭವಿಷ್ಯ ನುಡಿದ ಕುಮಾರಸ್ವಾಮಿ

Paris Olympics 2024
ಪ್ರಮುಖ ಸುದ್ದಿ16 mins ago

Paris Olympics 2024 : ಶೂಟಿಂಗ್​ನಲ್ಲಿ ಭಾರತಕ್ಕೆ ಖುಷಿ ಸುದ್ದಿ; ಮಹಿಳೆಯರ 10 ಮೀಟರ್ ಏರ್​ ಪಿಸ್ತೂಲ್ ವಿಭಾಗದಲ್ಲಿ ಮನು ಭಾಕರ್​ ಫೈನಲ್​ಗೆ

Paris Olympics 2024
ಫ್ಯಾಷನ್18 mins ago

Paris Olympics 2024: ಭಾರತೀಯ ಅಥ್ಲೀಟ್‌ಗಳ ಡ್ರೆಸ್‌ ಕೋಡ್‌ ವಿನ್ಯಾಸಕ್ಕೆ ಜನರ ಮಿಶ್ರ ಪ್ರತಿಕ್ರಿಯೆ

Vaccin for Hiv
ಆರೋಗ್ಯ51 mins ago

Vaccine for HIV: ವರ್ಷಕ್ಕೆರಡು ಬಾರಿ ಈ ಇಂಜೆಕ್ಷನ್‌ ತೆಗೆದುಕೊಂಡರೆ ಎಚ್‌ಐವಿ ಭಯವೇ ಬೇಡ!

Physical Assault
ದೇಶ59 mins ago

Physical Assault : ಅಶ್ಲೀಲ ವಿಡಿಯೊಗಳನ್ನು ನೋಡಿ 9 ವರ್ಷದ ತಂಗಿಯನ್ನು ಅತ್ಯಾಚಾರ ಮಾಡಿ ಕೊಂದ 13 ವರ್ಷದ ಬಾಲಕ!

Paris Olympics
ಕ್ರೀಡೆ1 hour ago

Paris Olympics: ಕ್ರೀಡಾ ಗ್ರಾಮದಲ್ಲಿ ಭಾರತದ ಅಥ್ಲೀಟ್ಸ್‌ಗೆ ಆಹಾರ ಕೊರತೆ; ರೆಸ್ಟೋರೆಂಟ್​ನಿಂದ ರೋಟಿ, ದಾಲ್‌ ತರಿಸಿದ ಬಾಕ್ಸರ್​

karnataka Rain
ಮಳೆ1 hour ago

Karnataka Rain : ಮಳೆಗೆ ಮನೆ ಮುಳುಗಡೆಯಾದ ಸುದ್ದಿ ಕೇಳಿ ಮನೆ ಯಜಮಾನ ಹೃದಯಾಘಾತದಿಂದ ಸಾವು

Rahul Gandhi
ದೇಶ1 hour ago

Rahul Gandhi: ನೀಟ್‌ನಲ್ಲಿ ‘ಎಷ್ಟು ವೋಟ್‌’ ಪಡೆದಿರಿ ಎಂದು ವಿದ್ಯಾರ್ಥಿಗಳಿಗೆ ಕೇಳಿದ ರಾಹುಲ್‌ ಗಾಂಧಿ; Video ವೈರಲ್

Gautam Gambhir
ಕ್ರೀಡೆ1 hour ago

Gautam Gambhir : ಗೌತಮ್​ ಗಂಭೀರ್​ಗೆ ವಿಶೇಷ ಸಂದೇಶ ಕಳುಹಿಸಿದ ದ್ರಾವಿಡ್​; ಭಾವುಕರಾದ ನೂತನ ಕೋಚ್​!

Kannada New Movie Nava Digantha latest news
ಸಿನಿಮಾ2 hours ago

Kannada New Movie: ನೆರವೇರಿತು ’ನವ ದಿಗಂತ’ ಚಿತ್ರದ ಮುಹೂರ್ತ

Sharmitha Gowda in bikini
ಕಿರುತೆರೆ10 months ago

Geetha Serial Kannada: ನಿದ್ದೆ ಕದ್ದ ಚೋರಿ! ನಟಿ `ಭಾನುಮತಿ’ ಹಾಟ್‌ ಪೋಟೊಗಳಿಗೆ ಫ್ಯಾನ್ಸ್ ಫುಲ್ ಫಿದಾ

Kannada Serials
ಕಿರುತೆರೆ10 months ago

Kannada Serials TRP: 2ನೇ ಸ್ಥಾನದಲ್ಲಿ 2 ಧಾರಾವಾಹಿಗಳು; ಟಿಆರ್‌ಪಿ ರೇಸ್‌ನಲ್ಲಿಲ್ಲ ಭಾಗ್ಯಲಕ್ಷ್ಮೀ!

Bigg Boss- Saregamapa 20 average TRP
ಕಿರುತೆರೆ9 months ago

Kannada Serials TRP: ಏಳನೇ ಸ್ಥಾನಕ್ಕೆ ʻಅಮೃತಧಾರೆʼ ಕುಸಿತ; ಬಿಗ್‌ ಬಾಸ್‌-ಸರಿಗಮಪ ಟಿಆರ್‌ಪಿ ಎಷ್ಟು?

galipata neetu
ಕಿರುತೆರೆ8 months ago

Kanyadana Serial: ಕಿರುತೆರೆಗೆ ಮತ್ತೆ ಎಂಟ್ರಿ ಕೊಟ್ಟ ʻಗಾಳಿಪಟʼ ಖ್ಯಾತಿಯ ʻನೀತುʼ!

Kannada Serials
ಕಿರುತೆರೆ10 months ago

Kannada Serials TRP: ನಾಲ್ಕನೇ ಸ್ಥಾನಕ್ಕೆ ಕುಸಿತ ಕಂಡ ʻಸೀತಾ ರಾಮʼ; ಟಿಆರ್‌ಪಿ ರೇಸ್‌ಗೆ ʻಭಾಗ್ಯಲಕ್ಷ್ಮಿʼ ಬ್ಯಾಕ್‌!

Kannada Serials
ಕಿರುತೆರೆ10 months ago

Kannada Serials TRP: ಟಿಆರ್‌ಪಿಯಲ್ಲಿ ʻಭಾಗ್ಯಲಕ್ಷ್ಮೀʼ ಹವಾ; ʻಪುಟ್ಟಕ್ಕನ ಮಕ್ಕಳುʼ ಧಾರಾವಾಹಿಗೆ ಸಂಕಷ್ಟ!

Bigg Boss' dominates TRP; Sita Rama fell to the sixth position
ಕಿರುತೆರೆ9 months ago

Kannada Serials TRP: ಟಿಆರ್‌ಪಿಯಲ್ಲಿ ʻಬಿಗ್ ಬಾಸ್ʼದೇ ಮೇಲುಗೈ; 6ನೇ ಸ್ಥಾನಕ್ಕೆ ಕುಸಿದ ʻಸೀತಾ ರಾಮʼ

geetha serial Dhanush gowda engagement
ಕಿರುತೆರೆ7 months ago

Dhanush Gowda: ಗೀತಾ ಧಾರಾವಾಹಿ ನಟನ ನಿಶ್ಚಿತಾರ್ಥ; ಭವ್ಯಾಳ ಕಮೆಂಟ್‌ ಬಾಕ್ಸ್‌ ಆಫ್‌!

varun
ಕಿರುತೆರೆ8 months ago

Brindavana Serial: ʼಬೃಂದಾವನʼ ಧಾರಾವಾಹಿಯಲ್ಲಿ ದೊಡ್ಡ ಟ್ವಿಸ್ಟ್‌; ಪ್ರಮುಖ ಪಾತ್ರಧಾರಿಯೇ ಬದಲು

Kannada Serials
ಕಿರುತೆರೆ11 months ago

Kannada Serials TRP: ಟಿಆರ್‌ಪಿಯಲ್ಲಿ ಏರಿಕೆ ಕಂಡ ʻಅಮೃತಧಾರೆʼ; ʻಗಟ್ಟಿಮೇಳʼಕ್ಕೆ ನಾಲ್ಕನೇ ಸ್ಥಾನ!

ramanagara news
ರಾಮನಗರ4 hours ago

Ramanagar News : ರಾಮನಗರದಲ್ಲಿ ಎರಡು ಜಡೆ ಹಾಕಿಲ್ಲವೆಂದು ವಿದ್ಯಾರ್ಥಿನಿಯರ ಕೂದಲು ಕತ್ತರಿಸಿದ ಶಿಕ್ಷಕರು ಅಮಾನತು

karnataka rain
ಮಳೆ5 hours ago

Karnataka Rain : ಕಾವೇರಿ ನದಿ ತೀರದಲ್ಲಿ ಪ್ರವಾಹ ಭೀತಿ; ಮುತ್ತತ್ತಿಗೆ ಪ್ರವಾಸಿಗರ ನಿಷೇಧ, ಶ್ರೀರಂಗಪಟ್ಟಣದಲ್ಲಿ ಪಿಂಡ ಪ್ರದಾನಕ್ಕೆ ಬ್ರೇಕ್

Ankola landslide
ಉತ್ತರ ಕನ್ನಡ24 hours ago

Ankola landslide: ಅಂಕೋಲಾ-ಶಿರೂರು ಗುಡ್ಡ ಕುಸಿತ; ನಾಳೆಯಿಂದ ಪ್ಲೋಟಿಂಗ್ ಪ್ಲಾಟ್‌ಫಾರಂ ಕಾರ್ಯಾಚರಣೆ

karnataka rain
ಮಳೆ1 day ago

Karnataka Rain : ಉಕ್ಕಿ ಹರಿಯುವ ನೇತ್ರಾವತಿ ನದಿಯಲ್ಲಿ ತೇಲಿ ಬಂದ ಜೀವಂತ ಹಸು

Karnataka Rain
ಮಳೆ1 day ago

Karnataka Rain: ವಿದ್ಯುತ್‌ ದುರಸ್ತಿಗಾಗಿ ಪ್ರಾಣದ ಹಂಗು ತೊರೆದು ಉಕ್ಕಿ ಹರಿಯುವ ನೀರಿಗೆ ಧುಮುಕಿದ ಲೈನ್‌ ಮ್ಯಾನ್‌!

Karnataka rain
ಮಳೆ1 day ago

Karnataka Rain : ಹಾಸನದಲ್ಲಿ ಹೇಮಾವತಿ, ಚಿಕ್ಕಮಗಳೂರಲ್ಲಿ ಭದ್ರೆಯ ಅಬ್ಬರಕ್ಕೆ ಜನರು ತತ್ತರ

karnataka Rain
ಮಳೆ2 days ago

Karnataka Rain : ಮನೆಯೊಳಗೆ ನುಗ್ಗಿದ ಮಳೆ ನೀರು; ಕಾಲು ಜಾರಿ ಬಿದ್ದು ವೃದ್ಧೆ ಸಾವು

Actor Darshan
ಸ್ಯಾಂಡಲ್ ವುಡ್2 days ago

Actor Darshan: ನಟ ದರ್ಶನ್ ಇರುವ ಜೈಲು ಕೋಣೆ ಹೇಗಿದೆ?

Actor Darshan
ಸಿನಿಮಾ2 days ago

Actor Darshan : ಹೆಂಡ್ತಿ ಮಕ್ಕಳೊಟ್ಟಿಗೆ ಚೆನ್ನಾಗಿರು.. ಸಹಕೈದಿ ಜತೆಗೆ 12 ನಿಮಿಷ ಕಳೆದ ನಟ ದರ್ಶನ್‌

Actor Darshan
ಸಿನಿಮಾ2 days ago

Actor Darshan: ಆಧ್ಯಾತ್ಮದತ್ತ ವಾಲಿದ ದರ್ಶನ್‌; ಜೈಲಲ್ಲಿ ಹೇಗಿದೆ ಗೊತ್ತಾ ನಟನ ಬದುಕು

ಟ್ರೆಂಡಿಂಗ್‌