BY Vijayendra :‌ ನಾಸಿರ್‌ ಹುಸೇನ್‌ ಕೂಡಾ ಅಪರಾಧಿ, FIRನಲ್ಲಿ ಸೇರಿಸಿ; ವಿಜಯೇಂದ್ರ ಆಗ್ರಹ - Vistara News

ಬೆಳಗಾವಿ

BY Vijayendra :‌ ನಾಸಿರ್‌ ಹುಸೇನ್‌ ಕೂಡಾ ಅಪರಾಧಿ, FIRನಲ್ಲಿ ಸೇರಿಸಿ; ವಿಜಯೇಂದ್ರ ಆಗ್ರಹ

BY Vijayendra : ಪಾಕಿಸ್ತಾನ್‌ ಜಿಂದಾಬಾದ್‌ ಘೋಷಣೆ ಪ್ರಕರಣದಲ್ಲಿ ರಾಜ್ಯಸಭಾ ಚುನಾವಣೆ ಗೆದ್ದ ನಾಸಿರ್‌ ಹುಸೇನ್‌ ಕೂಡಾ ಆರೋಪಿ. ಅವರನ್ನು ಪ್ರಮಾಣವಚನ ಸ್ವೀಕರಿಸಲು ಬಿಡಬಾರದು ಎಂದು ವಿಜಯೇಂದ್ರ ಆಗ್ರಹಿಸಿದ್ದಾರೆ.

VISTARANEWS.COM


on

Sedition Case BY Vijayendra
ಮಹತ್ವದ, ಕುತೂಹಲಕರ ಸುದ್ದಿಗಾಗಿ ಫಾಲೊ ಮಾಡಿ
Koo

ಬೆಳಗಾವಿ: ವಿಧಾನ ಸೌಧದಲ್ಲಿ (Vidhana Soudha) ಪಾಕಿಸ್ತಾನ್ ಜಿಂದಾಬಾದ್‌ (Pakistan Zindabad) ಘೋಷಣೆ ಕೂಗಿದ ಪ್ರಕರಣದಲ್ಲಿ ರಾಜ್ಯಸಭಾ ಸದಸ್ಯರಾಗಿ (Rajyasabha Member) ಕಾಂಗ್ರೆಸ್‍ನಿಂದ ಆಯ್ಕೆಯಾದ ನಾಸಿರ್ ಹುಸೇನ್ (Nasir Husein) ಅವರನ್ನು ಕೂಡ ಅಪರಾಧಿ ಎಂದು ಎಫ್‍ಐಆರ್‌ನಲ್ಲಿ ಸೇರಿಸಬೇಕು. ಜಿಂದಾಬಾದ್‌ ಘೋಷಣೆ ಮಾಡಿದ ಮೂವರು ಆರೋಪಿಗಳ ವಿವರ ಲಭಿಸಿದೆ. ನಾಲ್ಕನೇ ಆರೋಪಿಯಾಗಿ ನಾಸೀರ್ ಹುಸೇನ್ ಹೆಸರು ಸೇರಿಸಿ ಎಂದು ಬಿಜೆಪಿ ರಾಜ್ಯಾಧ್ಯಕ್ಷ ಮತ್ತು ಶಾಸಕ ಬಿ.ವೈ.ವಿಜಯೇಂದ್ರ (BY Vijayendra) ಅವರು ಆಗ್ರಹಿಸಿದ್ದಾರೆ.

ಬೆಳಗಾವಿಯ ವಿಮಾನ ನಿಲ್ದಾಣದಲ್ಲಿ ಮಂಗಳವಾರ ಮಾಧ್ಯಮ ಪ್ರತಿನಿಧಿಗಳ ಜೊತೆ ಮಾತನಾಡಿದ ಅವರು, ಖಾಸಗಿ ಎಫ್‍ಎಸ್‍ಎಲ್ ವರದಿ ಬಿಡುಗಡೆ ಆಗದೆ ಇದ್ದಿದ್ದರೆ ಸರಕಾರ ಈ ದೇಶದ್ರೋಹಿಗಳನ್ನು ಬಂಧಿಸಲು ಮೀನ ಮೇಷ ಎಣಿಸುವ ಸಾಧ್ಯತೆ ಇತ್ತು ಎಂದು ಅನುಮಾನ ವ್ಯಕ್ತಪಡಿಸಿದರು.

Sedition Case : ಇನ್ನೂ ಎಫ್‌ಎಸ್‌ಎಲ್‌ ವರದಿ ಯಾಕೆ ಬಿಡುಗಡೆ ಮಾಡಿಲ್ಲ?

ವಿಧಾನಸೌಧದ ಒಳಗೆ ಕೆಲವು ದೇಶದ್ರೋಹಿಗಳು ಪಾಕಿಸ್ತಾನ ಜಿಂದಾಬಾದ್ ಎಂಬ ಘೋಷಣೆ ಕೂಗಿದ ನಂತರ ಬಿಜೆಪಿ ನಿರಂತರ ಹೋರಾಟದ ಪ್ರತಿಫಲವಾಗಿ ಸೋಮವಾರ ಮೂರು ದೇಶದ್ರೋಹಿಗಳನ್ನು ಬಂಧಿಸಿದ್ದಾರೆ. ಆದರೆ, ರಾಜ್ಯ ಸರಕಾರ ಇನ್ನೂ ಎಫ್.ಎಸ್.ಎಲ್ ವರದಿಯನ್ನು ಬಹಿರಂಗಪಡಿಸಿಲ್ಲ ಎಂದು ಆಕ್ಷೇಪಿಸಿದರು.

ಸರಕಾರ ಯಾವ ಕಾರಣಕ್ಕೆ ಎಫ್.ಎಸ್.ಎಲ್ ವರದಿಯನ್ನು ಬಿಡುಗಡೆ ಮಾಡಲು ಸಾಧ್ಯವಾಗಿಲ್ಲ ಎಂದು ಪ್ರಶ್ನಿಸಿದ ಅವರು, ಇದಕ್ಕೆ ಉತ್ತರ ಕೊಡಿ ಎಂದು ಆಗ್ರಹಿಸಿದರು. ಈ ದೇಶದ್ರೋಹಿ ಘಟನೆಯ ಸೂತ್ರಧಾರಿಗಳು ಯಾರು? ಪಾತ್ರಧಾರಿಗಳು ಯಾರು? ಎಂದು ಕೇಳಿದರು. ಪ್ರಮುಖರಾದ ರಾಜ್ಯಸಭಾ ಸದಸ್ಯ ನಾಸೀರ್ ಹುಸೇನ್ ಅವರ ಹೆಸರನ್ನೇ ಪೊಲೀಸರು ಕೈಬಿಟ್ಟಿದ್ದಾರೆ ಎಂದು ಆರೋಪಿಸಿದರು.

ತನಿಖೆ ಪೂರ್ಣ ಆಗುವವರೆಗೆ ನಾಸಿರ್‌ ಹುಸೇನ್‌ ಪ್ರಮಾಣವಚನ ಸ್ವೀಕರಿಸಬಾರದು

ಜನಪ್ರತಿನಿಧಿ, ರಾಜ್ಯಸಭಾ ಸದಸ್ಯ ಆಗುವವರು ಸಂವಿಧಾನ ಮತ್ತು ದೇಶದ ಸಾರ್ವಭೌಮತ್ವ- ಅಖಂಡತೆಯನ್ನು ಎತ್ತಿಹಿಡಿಯುವುದಾಗಿ ಪ್ರಮಾಣವಚನ ಸ್ವೀಕಾರ ಮಾಡುತ್ತಾರೆ. ಈ ತನಿಖೆ ಪೂರ್ಣಗೊಳ್ಳುವವರೆಗೆ ನಾಸೀರ್ ಹುಸೇನ್ ಅವರು ಪ್ರಮಾಣವಚನ ಸ್ವೀಕರಿಸಬಾರದು ಎಂದು ಅವರು ಒತ್ತಾಯಿಸಿದರು. ಈ ಸಂಬಂಧ ರಾಜ್ಯಸಭಾ ಅಧ್ಯಕ್ಷರಾದ ಉಪ ರಾಷ್ಟ್ರಪತಿಗಳಿಗೆ ಬಿಜೆಪಿ ವತಿಯಿಂದ ಇವತ್ತೇ ಪತ್ರ ಬರೆಯಲಿದ್ದೇವೆ. ತನಿಖೆ ಪೂರ್ಣಗೊಳ್ಳುವವರೆಗೆ ಅವರಿಗೆ ಪ್ರಮಾಣವಚನ ಬೋಧಿಸದೆ ಇರಲು ಒತ್ತಾಯ ಮಾಡಲಿದ್ದೇವೆ ಎಂದರು.

ಮುಖ್ಯಮಂತ್ರಿಗಳು, ಕಾಂಗ್ರೆಸ್ ಪಕ್ಷದಲ್ಲಿ ಪ್ರಾಮಾಣಿಕತೆ ಇದ್ದರೆ, ದೇಶಪ್ರೇಮ ಇದ್ದಲ್ಲಿ ಈ ಪ್ರಕರಣವನ್ನು ಗಂಭೀರವಾಗಿ ಪರಿಗಣಿಸಿ ಎಂದು ಒತ್ತಾಯಿಸಿದರು. ನಾಸೀರ್ ಹುಸೇನ್ ಅವರು ಪ್ರಕರಣದಲ್ಲಿ ನಿರ್ದೋಷಿ ಎಂದು ಹೊರಕ್ಕೆ ಬರುವವರೆಗೆ ಅವರಿಗೆ ರಾಜ್ಯಸಭಾ ಸದಸ್ಯತ್ವದ ಪ್ರಮಾಣವಚನ ಸ್ವೀಕಾರಕ್ಕೆ ಅವಕಾಶ ಕೊಡಬಾರದು ಎಂದು ಆಗ್ರಹವನ್ನು ಮುಂದಿಟ್ಟರು.

ರಾಜ್ಯ ಸರಕಾರವು ಈ ವಿಷಯದಲ್ಲಿ ಪೊಲೀಸ್ ಅಧಿಕಾರಿಗಳ ಮೇಲೆ ಯಾಕೆ ಒತ್ತಾಯ ಹಾಕುತ್ತಿದೆ? ಎಫ್‍ಎಸ್‍ಎಲ್ ವರದಿ ಬಹಿರಂಗಪಡಿಸಲು ಯಾಕೆ ಮೀನಮೇಷ ಮಾಡುತ್ತ ಇದ್ದೀರಿ? ಎಂದ ಅವರು, ಈ ವಿಚಾರವನ್ನು ಇನ್ನೂ ಗಂಭೀರವಾಗಿ ಪರಿಗಣಿಸಿ ಎಂದು ಆಗ್ರಹಿಸಿದರು.

ಇದನ್ನೂ ಓದಿ: Sedition Case : ಪಾಕಿಸ್ತಾನ್‌ ಮುರ್ದಾಬಾದ್‌ ಬದಲು ಜಿಂದಾಬಾದ್‌ ಎಂದ ಬಿಜೆಪಿ ಕಾರ್ಯಕರ್ತ ಜೈಲಿಗೆ!

ದೇಶದ್ರೋಹದ ಪ್ರಶ್ನೆ ಬಂದಾಗ ಜಾತಿ, ಧರ್ಮ ನೋಡಬಾರದು

ದೇಶದ್ರೋಹದ ಪ್ರಶ್ನೆ ಬಂದಾಗ ಅವನು ಹಿಂದೂ, ಇವನು ಮುಸಲ್ಮಾನ ಎಂಬ ಪ್ರಶ್ನೆ ಉದ್ಭವವಾಗುವುದಿಲ್ಲ. ದೇಶದ್ರೋಹಿಗಳಿಗೆ ಯಾವುದೇ ಜಾತಿ, ಧರ್ಮ ಅಡ್ಡಿ ಬರಬಾರದು. ಈ ವಿಚಾರವನ್ನು ರಾಜ್ಯ ಸರಕಾರ ಗಂಭೀರವಾಗಿ ಪರಿಗಣಿಸಿದಂತೆ ನಮಗಂತೂ ತೋರುತ್ತಿಲ್ಲ ಎಂದು ಆಕ್ಷೇಪ ಸೂಚಿಸಿದರು. ಇದನ್ನು ಗಂಭೀರವಾಗಿ ಪರಿಗಣಿಸಬೇಕು ಎಂದು ತಿಳಿಸಿದರು.

ಕ್ಷಣ ಕ್ಷಣದ ಮಾಹಿತಿಗಾಗಿ Vistara News FaceBook ಪೇಜ್ ಫಾಲೋ ಮಾಡಿ
ಮಹತ್ವದ ಮಾಹಿತಿಗಾಗಿ ವಿಸ್ತಾರ ನ್ಯೂಸ್ ಆ್ಯಪ್ ಉಚಿತವಾಗಿ ಡೌನ್ ಲೋಡ್ ಮಾಡಿಕೊಳ್ಳಿ: Andriod App | IOS App
Continue Reading
Click to comment

Leave a Reply

Your email address will not be published. Required fields are marked *

ಬೆಳಗಾವಿ

Gas Cylinder Blast: ಲೈಟ್ ಆನ್ ಮಾಡುತ್ತಿದ್ದಂತೆ ಸಿಲಿಂಡರ್‌ ಸ್ಫೋಟ; ಪತಿ- ಪತ್ನಿ ಗಂಭೀರ

Gas Cylinder Blast : ಗ್ಯಾಸ್‌ ಸಿಲಿಂಡರ್‌ ಸೋರಿಕೆ ಆಗಿದ್ದು, ಅಡುಗೆ ಮನೆಯ ಲೈಟ್‌ ಆನ್‌ ಮಾಡುತ್ತಿದ್ದಂತೆ ಸಿಲಿಂಡರ್‌ ಸ್ಫೋಟಗೊಂಡಿದೆ. ಪರಿಣಾಮ ಮನೆಯಲ್ಲಿದ್ದ ವೃದ್ಧರಿಬ್ಬರಿಗೆ ಗಂಭೀರ ಗಾಯವಾಗಿದದೆ. ಸ್ಫೋಟದ ತೀವ್ರತೆಗೆ ಅಕ್ಕ ಪಕ್ಕದ ಮನೆಯವರು ಬೆಚ್ಚಿ ಬಿದ್ದಿದ್ದಾರೆ.

VISTARANEWS.COM


on

By

Gas Cylinder Blast
Koo

ಬೆಳಗಾವಿ: ಬೆಳ್ಳಂಬೆಳಿಗ್ಗೆ ಭೀಕರ ಗ್ಯಾಸ್‌ ಸಿಲಿಂಡರ್ ಸ್ಫೋಟ (LPG Cylinder Blast) ಸಂಭವಿಸಿದ್ದು, ಇಬ್ಬರಿಗೆ ಗಂಭೀರ ಗಾಯಗಳಾಗಿವೆ. ಬೆಳಗಾವಿಯ ಸುಳಗಾದಲ್ಲಿ ಈ ಭೀಕರ ಸ್ಫೋಟ (Gas Cylinder Blast) ಸಂಭವಿಸಿದೆ.

ಕಲ್ಲಪ್ಪ ಪಾಟೀಲ್ (62), ಸುಮನ್ ಪಾಟೀಲ್(60) ಎಂಬುವವರು ಗಂಭೀರವಾಗಿ ಗಾಯಗೊಂಡಿದ್ದಾರೆ. ಕಲ್ಲಪ್ಪ ಹಾಗೂ ಸುಮನ್ ಅವರಿಗೆ ಶೇ.70ರಷ್ಟು ಸುಟ್ಟ ಗಾಯಗಳಾಗಿವೆ. ಸ್ಥಳೀಯರು ಅವರನ್ನು ಖಾಸಗಿ ಆಸ್ಪತ್ರೆಗೆ ದಾಖಲಿಸಿದ್ದು, ಚಿಕಿತ್ಸೆ ಮುಂದುವರಿದಿದೆ.

ಬೆಳಗ್ಗೆ 4 ಗಂಟೆಗೆ ಸುಮನ್‌ ಪಾಟೀಲ್‌ ಅವರು ಎದ್ದು, ಅಡುಗೆ ಮನೆಗೆ ಹೋಗಲು ಲೈಟ್ ಸ್ವಿಚ್ ಆನ್ ಮಾಡಿದ್ದಾರೆ. ಈ ವೇಳೆ ಏಕಾಏಕಿ ಸಿಲಿಂಡರ್‌ ಬ್ಲಾಸ್ಟ್ ಆಗಿದೆ. ಗ್ಯಾಸ್‌ ಸಿಲಿಂಡರ್ ಸಮೀಪ ಹೋಗದಿದ್ದರೂ ಸ್ಫೋಟಗೊಂಡಿದೆ. ಗ್ಯಾಸ್‌ ಲಿಂಕ್‌ ಆಗಿದ್ದರಿಂದ ಏಕಾಏಕಿ ಲೈಟ್‌ ಆನ್‌ ಮಾಡಿದ್ದರಿಂದ ಈ ದುರ್ಘಟನೆ ಸಂಭವಿಸಿದೆ ಎನ್ನಲಾಗಿದೆ.

ಎಲ್‌ಪಿಜಿ ಗ್ಯಾಸ್‌ ಸಿಲಿಂಡರ್ ಸಿಡಿದ ತೀವ್ರತೆಗೆ ಮನೆಯು ಡ್ಯಾಮೇಜ್ ಆಗಿದೆ. ಸಿಲಿಂಡರ್ ಸ್ಫೋಟಗೊಂಡ ತೀವ್ರತೆಗೆ ಮನೆಯ ವಸ್ತುಗಳೆಲ್ಲ ಚಲ್ಲಾಪಿಲ್ಲಿಯಾಗಿದೆ. ಸ್ಫೋಟದ ತೀವ್ರತೆಗೆ ಜನತೆ ಬೆಚ್ಚಿಬಿದ್ದಿದ್ದಾರೆ. ಮನೆಯ ಇಂಟೀರಿಯರ್ ವಸ್ತುಗಳು ಸಂಪೂರ್ಣ ಸುಟ್ಟು ಕರಕಲಾಗಿದೆ. ಟ್ರಜರಿ,ವಸ್ತ್ರ ದವಸ ಧಾನ್ಯಗಳು ಮನೆಯ ತುಂಬ ಚಲ್ಲಾಪಿಲ್ಲಿಯಾಗಿ ಬಿದ್ದಿವೆ. ಕಾಕತಿ ಪೊಲೀಸ್ ಠಾಣಾ ವ್ಯಾಪ್ತಿಯಲ್ಲಿ ಘಟನೆ ನಡೆದಿದೆ.

ಇದನ್ನೂ ಓದಿ: Accident Case : ಟ್ರ್ಯಾಕ್ಟರ್ ರೋಟವೇಟರ್‌ಗೆ ಸಿಲುಕಿ ಬಾಲಕನ ದೇಹ ಛಿದ್ರ ಛಿದ್ರ

ಬಾಲಕನ ಕೊಲೆ ಪ್ರಕರಣಕ್ಕೆ ಟ್ವಿಸ್ಟ್‌, ಮೊಬೈಲ್‌ ಗೀಳಿಗಾಗಿ ಅಣ್ಣನೇ ಕೊಂದ

ಆನೇಕಲ್: ಬೆಂಗಳೂರು ಹೊರವಲಯ (Bangalore rural) ಆನೇಕಲ್ ತಾಲ್ಲೂಕಿನ ಸರ್ಜಾಪುರದಲ್ಲಿ (Sarjapura murder) ನಿನ್ನೆ ನಡೆದ ಹದಿನೈದು ವರ್ಷದ ಬಾಲಕನ ಕೊಲೆ ಪ್ರಕರಣದಲ್ಲಿ (boy murder case) ಆರೋಪಿಯನ್ನು ಪೊಲೀಸರು ಹೆಡೆಮುರಿ ಕಟ್ಟಿದ್ದಾರೆ. ತಮ್ಮನನ್ನೇ ಕೊಲೆಗೈದ ಪಾಪಿ ಅಣ್ಣ (brother) ಅಂದರ್ ಆಗಿದ್ದಾನೆ.

ಪ್ರಾಣೇಶ್ (15) ಕೊಲೆಯಾಗಿದ್ದ ಬಾಲಕ. ಶಿವಕುಮಾರ್ (18) ಕೊಲೆ ಮಾಡಿದ ಪಾಪಿ ಸಹೋದರ. ಆನ್ಲೈನ್ ಗೇಮ್ ಆಡಲು ಮೊಬೈಲ್ ನೀಡಲಿಲ್ಲ ಅಂತ ಪಾತಕಿ, ತಮ್ಮನನ್ನು ಸಾಯಿಸಿದ್ದಾನೆ. ಕೊಲೆ ಆರೋಪಿಯನ್ನು ಸರ್ಜಾಪುರ ಪೊಲೀಸರು ಬಂಧಿಸಿದ್ದಾರೆ.

ಇವರಿಬ್ಬರೂ ಮೂಲತಃ ಆಂಧ್ರ ಮೂಲದ ಸೂಳೆಕೆರಿ ಗ್ರಾಮದ ಚನ್ನಮ್ಮ ಮತ್ತು ಬಸವರಾಜ್ ದಂಪತಿಯ ಮಕ್ಕಳು. ಈ ಕುಟುಂಬ ಕೆಲಸ ಅರಸಿಕೊಂಡು ಕಳೆದ ಮೂರು ತಿಂಗಳ ಹಿಂದೆ ನೆರಿಗಾ ಗ್ರಾಮಕ್ಕೆ ಬಂದಿತ್ತು. ಪತಿ-ಪತ್ನಿ ಹಾಗೂ ಹಿರಿಯ ಮಗ ಶಿವಕುಮಾರ್ ಗಾರೆ ಕೆಲಸ ಮಾಡಿಕೊಂಡಿದ್ದರು. ಸರ್ಕಾರಿ ಶಾಲೆಯಲ್ಲಿ ಏಳನೇ ತರಗತಿ ಓದುತ್ತಿದ್ದ ದ್ವಿತೀಯ ಪುತ್ರ ಪ್ರಾಣೇಶ್ ಸೂಳಕೆರೆ ಗ್ರಾಮದಲ್ಲಿ ಅಜ್ಜಿಯ ಜೊತೆಗೆ ವಾಸವಿದ್ದ.

ಬೇಸಿಗೆ ರಜೆಗೆ ನೆರಿಗಾ ಗ್ರಾಮದಲ್ಲಿನ ತಂದೆ ತಾಯಿ ಬಳಿಗೆ ಪ್ರಾಣೇಶ್‌ ಬಂದಿದ್ದ. ಮನೆಯಲ್ಲಿದ್ದ ಮೊಬೈಲಿನಲ್ಲಿ ಶಿವಕುಮಾರ್ ಯಾವಾಗ್ಲೂ ಆನ್ಲೈನ್ ಗೇಮ್ ಆಡುತ್ತಿದ್ದ. ಪ್ರಾಣೇಶ್ ಮನೆಗೆ ಬಂದವನೇ ಮೊಬೈಲ್‌ನಲ್ಲಿ ತಾನು ಗೇಮ್ ಆಡಲು ಶುರು ಮಾಡಿದ್ದ. ಪ್ರಾಣೇಶ್ ಬಳಿ ಮೊಬೈಲ್ ನೀಡುವಂತೆ ಶಿವಕುಮಾರ್ ಕೇಳುತ್ತಿದ್ದ. ಆದರೆ ಪ್ರಾಣೇಶ್‌ ಮೊಬೈಲ್ ನೀಡುತ್ತಿರಲಿಲ್ಲ.

ನನಗೆ ಆನ್ಲೈನ್ ಗೇಮ್ ಆಡಲು ಮೊಬೈಲ್ ಸಿಗುತ್ತಿಲ್ಲ ಎಂದು ಶಿವಕುಮಾರ ಕುಪಿತಗೊಂಡಿದ್ದ. ಇಬ್ಬರೂ ಮೊಬೈಲ್‌ಗಾಗಿ ಆಗಾಗಾ ಗಲಾಟೆ ಮಾಡಿಕೊಳ್ಳುತ್ತಿದ್ದರು. ಕಳೆದ ಹದಿನೈದನೇ ತಾರೀಕು ಗಾರೆ ಕೆಲಸಕ್ಕೆ ಹೋದ ಶಿವಕುಮಾರ ತಮ್ಮನನ್ನು ಕೊಲೆ ಮಾಡಲು ಸ್ಕೆಚ್ ಹಾಕಿದ್ದ. ಕೆಲಸ ಮಾಡುತ್ತಿದ್ದ ಜಾಗದಿಂದ ಸಣ್ಣ ಸುತ್ತಿಗೆಯನ್ನು ಜೇಬಿನಲ್ಲಿ ಇಟ್ಟುಕೊಂಡು ಬಂದಿದ್ದ.

ಬಯಲು ಶೌಚಕ್ಕೆ ಹೋಗಿದ್ದ ಪ್ರಾಣೇಶನನ್ನು ಹಿಂಬಾಲಿಸಿಕೊಂಡು ಹೋಗಿದ್ದ ಶಿವಕುಮಾರ್, ಅಲ್ಲಿ ಸುತ್ತಿಗೆಯಿಂದ ತಲೆ ಹಾಗೂ ಎದೆ ಭಾಗಕ್ಕೆ ಹಲ್ಲೆ ನಡೆಸಿದ್ದ. ಗಂಭೀರವಾಗಿ ಗಾಯಗೊಂಡಿದ್ದ ಪ್ರಾಣೇಶ್ ಸ್ಥಳದಲ್ಲಿಯೇ ಸಾವನ್ನಪ್ಪಿದ್ದ. ತಂದೆ ತಾಯಿ ಸಂಜೆ ಮನೆಗೆ ಬಂದು ಎಲ್ಲೆಡೆ ಹುಡುಕಾಡಿದ್ದರು. ಈ ವೇಳೆ ತಮ್ಮನ ಶವ ಬಿದ್ದಿದೆ ಎಂದು ಓಡೋಡಿ ಬಂದು ಪೋಷಕರಿಗೆ ತಿಳಿಸಿದ್ದ ಶಿವಕುಮಾರ.

ಸರ್ಜಾಪುರ ಪೋಲೀಸರು ಪ್ರಕರಣ ದಾಖಲು ಮಾಡಿಕೊಂಡು ತನಿಖೆಗೆ ಇಳಿದಿದ್ದರು. ತಮ್ಮನ ಶವವನ್ನು ನಾನೇ ಮೊದಲು ನೋಡಿದೆ ಎಂದು ಹೇಳುತ್ತಿದ್ದ ಶಿವಕುಮಾರನ ಮೇಲೆ ಪೋಲೀಸರಿಗೆ ಅನುಮಾನ ಮೂಡಿತ್ತು. ವಿಚಾರಣೆ ನಡೆಸಿದಾಗ ಆರೋಪಿ ಬಾಯಿ ಬಿಟ್ಟಿದ್ದಾನೆ. ಆರೋಪಿ ಶಿವಕುಮಾರ್‌ನನ್ನು ಬಂಧಿಸಿದ ಸರ್ಜಾಪುರ ಪೋಲೀಸರು ಜೈಲಿಗೆ ಕಳುಹಿಸಿದ್ದಾರೆ.

ಈ ಸಂಗತಿಯ ಕುರಿತು ನಿಮ್ಮ ಅನಿಸಿಕೆ ಏನು? ಕಾಮೆಂಟ್ ಮೂಲಕ ತಿಳಿಸಿ

Continue Reading

ಕ್ರೈಂ

Drowned: ಬಟ್ಟೆ ತೊಳೆಯಲು ಹೋಗಿ ನಾಲ್ವರು ಜಲ ಸಮಾಧಿ

Drowned: ಮಳೆಯಿಂದ ಉಕ್ಕಿ ಹರಿಯುತ್ತಿದ್ದ ದೂಧಗಂಗಾ ನದಿಯಲ್ಲಿ ಬಟ್ಟೆ ತೊಳೆಯಲು ಹೋದಾಗ ಆಕಸ್ಮಿಕವಾಗಿ ಬಿದ್ದು ಮುಳುಗಿ 4 ಜನರು ಮೃತಪಟ್ಟರು. ಗ್ರಾಮಸ್ಥರು ಇಬ್ಬರು ಮಹಿಳೆಯರು ಸೇರಿ 3 ಮಂದಿಯ ಶವಗಳನ್ನು ನದಿಯಿಂದ ಹೊರಕ್ಕೆ ತೆಗೆದಿದ್ದಾರೆ. ಇನ್ನೂ ಒಬ್ಬನ ಶವಕ್ಕಾಗಿ ಅಗ್ನಿಶಾಮಕ ಸಿಬ್ಬಂದಿಯಿಂದ ಹುಡುಕಾಟ ನಡೆದಿದೆ.

VISTARANEWS.COM


on

drowned 4 death in kolhapur
Koo

ಕೊಲ್ಹಾಪುರ: ನದಿಯಲ್ಲಿ ಬಟ್ಟೆ ತೊಳೆಯಲು ಹೋಗಿ ನಾಲ್ಕು ಮಂದಿ ಜಲಸಮಾಧಿಯಾದ (drowned death) ಘಟನೆ ಮಹಾರಾಷ್ಟ್ರದ ಕೊಲ್ಹಾಪುರ ಜಿಲ್ಲೆಯ ಕಾಗಲ ತಾಲೂಕಿನ ಬಸ್ತವಾಡೆ ಸೇತುವೆ ಬಳಿ ನಡೆದಿದೆ. ಮೃತಪಟ್ಟವರಲ್ಲಿ ಕರ್ನಾಟಕದ ಬೆಳಗಾವಿಯ (belagavi news) ಇಬ್ಬರು ಸೇರಿದ್ದಾರೆ.

ಮಳೆಯಿಂದ ಉಕ್ಕಿ ಹರಿಯುತ್ತಿದ್ದ ದೂಧಗಂಗಾ ನದಿಯಲ್ಲಿ ಬಟ್ಟೆ ತೊಳೆಯಲು ಹೋದಾಗ ಆಕಸ್ಮಿಕವಾಗಿ ಬಿದ್ದು ಮುಳುಗಿ 4 ಜನರು ಮೃತಪಟ್ಟರು. ಗ್ರಾಮಸ್ಥರು ಇಬ್ಬರು ಮಹಿಳೆಯರು ಸೇರಿ 3 ಮಂದಿಯ ಶವಗಳನ್ನು ನದಿಯಿಂದ ಹೊರಕ್ಕೆ ತೆಗೆದಿದ್ದಾರೆ. ಇನ್ನೂ ಒಬ್ಬನ ಶವಕ್ಕಾಗಿ ಅಗ್ನಿಶಾಮಕ ಸಿಬ್ಬಂದಿಯಿಂದ ಹುಡುಕಾಟ ನಡೆದಿದೆ.

ಮೃತರಲ್ಲಿ ಇಬ್ಬರು ಬೆಳಗಾವಿ ಜಿಲ್ಲೆಯ ಅಥಣಿ ನಿವಾಸಿಗಳು. ರೇಶ್ಮಾ ದಿಲಿಪ ಏಳಮಲೇ (34) ಹಾಗೂ ಯಶ್ ದಿಲಿಪ ಏಳಮಲೇ (17) ಇವರಿಬ್ಬರೂ ಕಾಗಲ ತಾಲೂಕಿನ ಅನ್ನುರ ಗ್ರಾಮದ ಜಾತ್ರೆಗೆ ಸಂಬಂಧಿಕರ ಮನೆಗೆ ಬಂದಿದ್ದರು. ಇನ್ನಿಬ್ಬರು ಮಹಾರಾಷ್ಟ್ರದ ಕೊಲ್ಹಾಪುರ ಜಿಲ್ಲೆಯವರು. ಕೊಲ್ಹಾಪುರ ಜಿಲ್ಲೆಯ ಮುರಗುಡ ನಿವಾಸಿ ಜಿತೇಂದ್ರ ಲೋಕರೆ (36) ಹಾಗೂ ಕೊಲ್ಹಾಪುರ ಜಿಲ್ಲೆಯ ರೂಕಡಿ ಗ್ರಾಮದ ನಿವಾಸಿ ಸವಿತಾ ಅಮರ ಕಾಂಬಳೆ (27). ಕಾಗಲ ಪೊಲೀಸ್ ಠಾಣೆಯಲ್ಲಿ ಪ್ರಕರಣ ದಾಖಲಾಗಿದೆ.

ಬಾಲಕನ ಕೊಲೆ ಪ್ರಕರಣಕ್ಕೆ ಟ್ವಿಸ್ಟ್‌, ಮೊಬೈಲ್‌ ಗೀಳಿಗಾಗಿ ಅಣ್ಣನೇ ಕೊಂದ

ಆನೇಕಲ್: ಬೆಂಗಳೂರು ಹೊರವಲಯ (Bangalore rural) ಆನೇಕಲ್ ತಾಲ್ಲೂಕಿನ ಸರ್ಜಾಪುರದಲ್ಲಿ (Sarjapura murder) ನಿನ್ನೆ ನಡೆದ ಹದಿನೈದು ವರ್ಷದ ಬಾಲಕನ ಕೊಲೆ ಪ್ರಕರಣದಲ್ಲಿ (boy murder case) ಆರೋಪಿಯನ್ನು ಪೊಲೀಸರು ಹೆಡೆಮುರಿ ಕಟ್ಟಿದ್ದಾರೆ. ತಮ್ಮನನ್ನೇ ಕೊಲೆಗೈದ ಪಾಪಿ ಅಣ್ಣ (brother) ಅಂದರ್ ಆಗಿದ್ದಾನೆ.

ಪ್ರಾಣೇಶ್ (15) ಕೊಲೆಯಾಗಿದ್ದ ಬಾಲಕ. ಶಿವಕುಮಾರ್ (18) ಕೊಲೆ ಮಾಡಿದ ಪಾಪಿ ಸಹೋದರ. ಆನ್ಲೈನ್ ಗೇಮ್ ಆಡಲು ಮೊಬೈಲ್ ನೀಡಲಿಲ್ಲ ಅಂತ ಪಾತಕಿ, ತಮ್ಮನನ್ನು ಸಾಯಿಸಿದ್ದಾನೆ. ಕೊಲೆ ಆರೋಪಿಯನ್ನು ಸರ್ಜಾಪುರ ಪೊಲೀಸರು ಬಂಧಿಸಿದ್ದಾರೆ.

ಇವರಿಬ್ಬರೂ ಮೂಲತಃ ಆಂಧ್ರ ಮೂಲದ ಸೂಳೆಕೆರಿ ಗ್ರಾಮದ ಚನ್ನಮ್ಮ ಮತ್ತು ಬಸವರಾಜ್ ದಂಪತಿಯ ಮಕ್ಕಳು. ಈ ಕುಟುಂಬ ಕೆಲಸ ಅರಸಿಕೊಂಡು ಕಳೆದ ಮೂರು ತಿಂಗಳ ಹಿಂದೆ ನೆರಿಗಾ ಗ್ರಾಮಕ್ಕೆ ಬಂದಿತ್ತು. ಪತಿ-ಪತ್ನಿ ಹಾಗೂ ಹಿರಿಯ ಮಗ ಶಿವಕುಮಾರ್ ಗಾರೆ ಕೆಲಸ ಮಾಡಿಕೊಂಡಿದ್ದರು. ಸರ್ಕಾರಿ ಶಾಲೆಯಲ್ಲಿ ಏಳನೇ ತರಗತಿ ಓದುತ್ತಿದ್ದ ದ್ವಿತೀಯ ಪುತ್ರ ಪ್ರಾಣೇಶ್ ಸೂಳಕೆರೆ ಗ್ರಾಮದಲ್ಲಿ ಅಜ್ಜಿಯ ಜೊತೆಗೆ ವಾಸವಿದ್ದ.

ಬೇಸಿಗೆ ರಜೆಗೆ ನೆರಿಗಾ ಗ್ರಾಮದಲ್ಲಿನ ತಂದೆ ತಾಯಿ ಬಳಿಗೆ ಪ್ರಾಣೇಶ್‌ ಬಂದಿದ್ದ. ಮನೆಯಲ್ಲಿದ್ದ ಮೊಬೈಲಿನಲ್ಲಿ ಶಿವಕುಮಾರ್ ಯಾವಾಗ್ಲೂ ಆನ್ಲೈನ್ ಗೇಮ್ ಆಡುತ್ತಿದ್ದ. ಪ್ರಾಣೇಶ್ ಮನೆಗೆ ಬಂದವನೇ ಮೊಬೈಲ್‌ನಲ್ಲಿ ತಾನು ಗೇಮ್ ಆಡಲು ಶುರು ಮಾಡಿದ್ದ. ಪ್ರಾಣೇಶ್ ಬಳಿ ಮೊಬೈಲ್ ನೀಡುವಂತೆ ಶಿವಕುಮಾರ್ ಕೇಳುತ್ತಿದ್ದ. ಆದರೆ ಪ್ರಾಣೇಶ್‌ ಮೊಬೈಲ್ ನೀಡುತ್ತಿರಲಿಲ್ಲ.

ನನಗೆ ಆನ್ಲೈನ್ ಗೇಮ್ ಆಡಲು ಮೊಬೈಲ್ ಸಿಗುತ್ತಿಲ್ಲ ಎಂದು ಶಿವಕುಮಾರ ಕುಪಿತಗೊಂಡಿದ್ದ. ಇಬ್ಬರೂ ಮೊಬೈಲ್‌ಗಾಗಿ ಆಗಾಗಾ ಗಲಾಟೆ ಮಾಡಿಕೊಳ್ಳುತ್ತಿದ್ದರು. ಕಳೆದ ಹದಿನೈದನೇ ತಾರೀಕು ಗಾರೆ ಕೆಲಸಕ್ಕೆ ಹೋದ ಶಿವಕುಮಾರ ತಮ್ಮನನ್ನು ಕೊಲೆ ಮಾಡಲು ಸ್ಕೆಚ್ ಹಾಕಿದ್ದ. ಕೆಲಸ ಮಾಡುತ್ತಿದ್ದ ಜಾಗದಿಂದ ಸಣ್ಣ ಸುತ್ತಿಗೆಯನ್ನು ಜೇಬಿನಲ್ಲಿ ಇಟ್ಟುಕೊಂಡು ಬಂದಿದ್ದ.

ಬಯಲು ಶೌಚಕ್ಕೆ ಹೋಗಿದ್ದ ಪ್ರಾಣೇಶನನ್ನು ಹಿಂಬಾಲಿಸಿಕೊಂಡು ಹೋಗಿದ್ದ ಶಿವಕುಮಾರ್, ಅಲ್ಲಿ ಸುತ್ತಿಗೆಯಿಂದ ತಲೆ ಹಾಗೂ ಎದೆ ಭಾಗಕ್ಕೆ ಹಲ್ಲೆ ನಡೆಸಿದ್ದ. ಗಂಭೀರವಾಗಿ ಗಾಯಗೊಂಡಿದ್ದ ಪ್ರಾಣೇಶ್ ಸ್ಥಳದಲ್ಲಿಯೇ ಸಾವನ್ನಪ್ಪಿದ್ದ. ತಂದೆ ತಾಯಿ ಸಂಜೆ ಮನೆಗೆ ಬಂದು ಎಲ್ಲೆಡೆ ಹುಡುಕಾಡಿದ್ದರು. ಈ ವೇಳೆ ತಮ್ಮನ ಶವ ಬಿದ್ದಿದೆ ಎಂದು ಓಡೋಡಿ ಬಂದು ಪೋಷಕರಿಗೆ ತಿಳಿಸಿದ್ದ ಶಿವಕುಮಾರ.

ಸರ್ಜಾಪುರ ಪೋಲೀಸರು ಪ್ರಕರಣ ದಾಖಲು ಮಾಡಿಕೊಂಡು ತನಿಖೆಗೆ ಇಳಿದಿದ್ದರು. ತಮ್ಮನ ಶವವನ್ನು ನಾನೇ ಮೊದಲು ನೋಡಿದೆ ಎಂದು ಹೇಳುತ್ತಿದ್ದ ಶಿವಕುಮಾರನ ಮೇಲೆ ಪೋಲೀಸರಿಗೆ ಅನುಮಾನ ಮೂಡಿತ್ತು. ವಿಚಾರಣೆ ನಡೆಸಿದಾಗ ಆರೋಪಿ ಬಾಯಿ ಬಿಟ್ಟಿದ್ದಾನೆ. ಆರೋಪಿ ಶಿವಕುಮಾರ್‌ನನ್ನು ಬಂಧಿಸಿದ ಸರ್ಜಾಪುರ ಪೋಲೀಸರು ಜೈಲಿಗೆ ಕಳುಹಿಸಿದ್ದಾರೆ.

ಇದನ್ನೂ ಓದಿ: Murder case : ಕಳ್ಳನೆಂದು ಹಿಡಿಯಲು ಹೋದ ಸೆಕ್ಯೂರಿಟಿ ಗಾರ್ಡ್‌ಗಳು; ನೂಕಾಟದಲ್ಲಿ ಬಿದ್ದ ಯುವಕ, ಕರೆಂಟ್‌ ಶಾಕ್‌ನಿಂದ ಸಾವು

Continue Reading

ಮಳೆ

Karnataka Weather : ಈ 8 ಜಿಲ್ಲೆಗಳಿಗೆ ಯೆಲ್ಲೋ ಅಲರ್ಟ್‌; ಬಿರುಗಾಳಿ ಸಹಿತ ಭಾರಿ ಮಳೆ ಎಚ್ಚರಿಕೆ

Karnataka Weather Forecast : ರಾಜ್ಯಾದ್ಯಂತ ಮಳೆಯಾಗುವ ನಿರೀಕ್ಷೆ ಇದ್ದು, 8 ಜಿಲ್ಲೆಗಳಲ್ಲಿ ಬಿರುಗಾಳಿ ಸಹಿತ ಗುಡುಗು, ಮಿಂಚಿನ ಮಳೆಯಾಗಲಿದ್ದು (Rain alert) ಯೆಲ್ಲೋ ಅಲರ್ಟ್‌ ಘೋಷಣೆ ಮಾಡಲಾಗಿದೆ.

VISTARANEWS.COM


on

By

karnataka Weather Forecast
Koo

ಬೆಂಗಳೂರು: ಚದುರಿದಂತೆ ವ್ಯಾಪಕವಾಗಿ ಹಗುರದಿಂದ ಮಧ್ಯಮ ಮಳೆಯಾಗಲಿದ್ದು, ರಾಜ್ಯಾದ್ಯಂತ ಪ್ರತ್ಯೇಕವಾಗಿ ಭಾರಿ ಮಳೆಯಾಗುವ (Heavy Rain) ಸಾಧ್ಯತೆಯಿದೆ. ರಾಜ್ಯದ ಪ್ರತ್ಯೇಕ ಸ್ಥಳಗಳಲ್ಲಿ 40-50 ಕಿ.ಮೀ ವೇಗದಲ್ಲಿ ಗಾಳಿ ಬೀಸಲಿದ್ದು, ಗುಡುಗು, ಮಿಂಚು ಸಹಿತ ಮಳೆಯಾಗುವ (Karnataka Weather Forecast) ಸಾಧ್ಯತೆಯಿದೆ.

ದಕ್ಷಿಣ ಒಳನಾಡಿನ ದಾವಣಗೆರೆ, ಚಿತ್ರದುರ್ಗದಲ್ಲಿ ಗುಡುಗು ಸಹಿತ ಭಾರೀ ಮಳೆಯಾಗುವ ಸಾಧ್ಯತೆ ಇದೆ. ತುಮಕೂರು, ರಾಮನಗರ, ಚಾಮರಾಜನಗರ, ಮೈಸೂರು, ಮಂಡ್ಯ, ಬೆಂಗಳೂರು ಗ್ರಾಮಾಂತರ ಮತ್ತು ಬೆಂಗಳೂರು ನಗರದಲ್ಲಿ ಮಳೆಯಾಗುವ ನಿರೀಕ್ಷೆ ಇದೆ. ಉಳಿದ ಭಾಗಗಳಲ್ಲಿ ವ್ಯಾಪಕವಾಗಿ ಹಗುರದಿಂದ ಮಧ್ಯಮ ಮಳೆಯಾಗುವ ಸಾಧ್ಯತೆಯಿದೆ.

ಉತ್ತರ ಒಳನಾಡಿನ ಬಳ್ಳಾರಿ ಮತ್ತು ವಿಜಯನಗರ ಜಿಲ್ಲೆಗಳಲ್ಲಿ ವ್ಯಾಪಕವಾಗಿ ಹಗುರದಿಂದ ಮಧ್ಯಮ ಮಳೆಯಾಗುವ ಸಾಧ್ಯತೆಯಿದೆ. ಈ ಪ್ರದೇಶದ ಉಳಿದ ಭಾಗಗಳಲ್ಲಿ ವ್ಯಾಪಕವಾಗಿ ಮಧ್ಯಮ ಮಳೆಯಾಗಲಿದೆ. ಮಲೆನಾಡಿನ ಹಾಸನ, ಚಿಕ್ಕಮಗಳೂರು, ಕೊಡಗು ಜಿಲ್ಲೆಗಳಲ್ಲಿ ಗುಡುಗು ಸಹಿತ ಭಾರೀ ಮಳೆಯಾಗುವ ಸಾಧ್ಯತೆ ಇದೆ. ಶಿವಮೊಗ್ಗ ಜಿಲ್ಲೆಯಾದ್ಯಂತ ಸಾಧಾರಣ ಮಳೆಯಾಗಲಿದೆ.

ಕರಾವಳಿಯ ದಕ್ಷಿಣ ಕನ್ನಡ ಜಿಲ್ಲೆಯಲ್ಲಿ ಗುಡುಗು ಸಹಿತ ಭಾರೀ ಮಳೆಯಾಗುವ ನಿರೀಕ್ಷೆ ಇದ್ದರೆ, ಉಳಿದ ಭಾಗಗಳಲ್ಲಿ ಚದುರಿದಂತೆ ವ್ಯಾಪಕವಾಗಿ ಹಗುರದಿಂದ ಕೂಡಿರಲಿದೆ. ಬೆಂಗಳೂರು ವ್ಯಾಪ್ತಿಯಲ್ಲಿ ಸಾಧಾರಣ ಮಳೆಯಾಗುವ ಸಾಧ್ಯತೆ ಇದೆ. ಗರಿಷ್ಠ ಮತ್ತು ಕನಿಷ್ಠ ಉಷ್ಣಾಂಶ 31 ಮತ್ತು 22 ಡಿಗ್ರಿ ಸೆಲ್ಸಿಯಸ್ ಇರಲಿದೆ.

ಭಾರೀ ಮಳೆಗೆ ಈ ಜಿಲ್ಲೆಗಳಿಗೆ ಯೆಲ್ಲೋ ಅಲರ್ಟ್‌

ಬಿರುಗಾಳಿ ಸಹಿತ ಭಾರಿ ಮಳೆಯಾಗಲಿದೆ. ಗಾಳಿಯು ಗಂಟೆಗೆ 40-50 ಕಿ.ಮೀ ಇರಲಿದೆ. ದಕ್ಷಿಣ ಕನ್ನಡ, ಉಡುಪಿ, ಚಾಮರಾಜನಗರ, ಹಾಸನ, ಕೊಡಗು, ಮಂಡ್ಯ, ಮೈಸೂರು ಮತ್ತು ಶಿವಮೊಗ್ಗ ಜಿಲ್ಲೆಗಳಲ್ಲಿ ಮಳೆಯಾಗಲಿದೆ. ಈ ಜಿಲ್ಲೆಗಳಿಗೆ ಯೆಲ್ಲೋ ಅಲರ್ಟ್ ಘೋಷಿಸಲಾಗಿದೆ.

ಈ ಸಂಗತಿಯ ಕುರಿತು ನಿಮ್ಮ ಅನಿಸಿಕೆ ಏನು? ಕಾಮೆಂಟ್ ಮೂಲಕ ತಿಳಿಸಿ

Continue Reading

ಮಳೆ

Karnataka Weather : ತುಮಕೂರಲ್ಲಿ ಸಿಡಿಲಿಗೆ ಜಾನುವಾರು ಬಲಿ; ಚಿಕ್ಕಮಗಳೂರಲ್ಲಿ ಮಳೆ ಅವಾಂತರಕ್ಕೆ ಜನ ತತ್ತರ

Karnataka Weather : ತುಮಕೂರಿನಲ್ಲಿ ಸಿಡಿಲಿಗೆ ಜಾನುವಾರೊಂದು ಬಲಿಯಾಗಿದ್ದು, ನಾಲ್ಕು ಜಾನುವಾರುಗಳಿಗೆ ಸುಟ್ಟ ಗಾಯಗಳಾಗಿವೆ. ಚಿಕ್ಕಮಗಳೂರಲ್ಲಿ ಮಳೆ ಅಬ್ಬರ ಮುಂದುವರಿದಿದ್ದು, ವಿದ್ಯುತ್‌ ಸಂಪರ್ಕ ಕಡಿತಗೊಂಡಿದೆ. ರಾಯಚೂರು, ವಿಜಯಪುರ ಸೇರಿದಂತೆ ಹಲವೆಡೆ ಮಳೆಯು ಅವಾಂತರವನ್ನೇ (Rain News) ಸೃಷ್ಟಿಸಿದೆ.

VISTARANEWS.COM


on

By

karnataka weather Forecast
Koo

ತುಮಕೂರು/ ಚಿಕ್ಕಮಗಳೂರು: ರಾಜ್ಯದ ಹಲವೆಡೆ ಮಳೆಯು (Karnataka Weather) ಅಬ್ಬರಿಸುತ್ತಿದ್ದು, ಅವಾಂತರವನ್ನೇ ಸೃಷ್ಟಿ ಮಾಡಿದೆ. ತುಮಕೂರಲ್ಲಿ ಸಿಡಿಲಿಗೆ ಹಸುವೊಂದು ಬಲಿಯಾಗಿದ್ದು, ನಾಲ್ಕು ಜಾನುವಾರುಗಳಿಗೆ ಸುಟ್ಟ ಗಾಯವಾಗಿವೆ. ತುಮಕೂರು ಜಿಲ್ಲೆಯ ಪಾವಗಡ ತಾಲೂಕಿನ ರಂಗಸಮುದ್ರ ಗ್ರಾಮದಲ್ಲಿ ಘಟನೆ ನಡೆದಿದೆ.

ಕರಿಯಪ್ಪ ಎಂಬುವರಿಗೆ ಸೇರಿದ ಜಾನುವಾರುಗಳನ್ನು ತೋಟದಲ್ಲಿದ್ದ ಗುಡಿಸಿಲಿನ ಕೊಟ್ಟಿಗೆಯಲ್ಲಿ ಕಟ್ಟಿದ್ದರು. ಆದರೆ ಸಿಡಿಲು ಬಡಿದು ಕೊಟ್ಟಿಗೆ ಹೊತ್ತಿ ಉರಿದಿದೆ. ಈ ವೇಳೆ ಬೆಂಕಿ ನಂದಿಸಲು ಹೋದ ಮಹಾಲಿಂಗನಿಗೂ ಗಾಯವಾಗಿದೆ. ಕರಿಯಪ್ಪ ಹಾಗೂ ಆತನ ಮಗ ಪ್ರಾಣಾಪಾಯದಿಂದ ಪಾರಾಗಿದ್ದಾರೆ. ಸಿಡಿಲು ಬಡಿದ ಪರಿಣಾಮ ಗುಡಿಸಲು ಭಸ್ಮವಾಗಿದೆ. ಅರಸಿಕೆರೆ ಪೊಲೀಸ್ ಠಾಣಾ ವ್ಯಾಪ್ತಿಯಲ್ಲಿ ಘಟನೆ ನಡೆದಿದೆ.

Karnataka Weather Forecast

ಚಿಕ್ಕಮಗಳೂರಲ್ಲಿ ಮಳೆ ಅವಾಂತರ

ಚಿಕ್ಕಮಗಳೂರಿನಲ್ಲಿ ಮಳೆ ಅವಾಂತರ ಮುಂದುವರಿದಿದೆ. ಭಾರಿ ಗಾಳಿ ಮಳೆಗೆ ಬೃಹತ್ ಗಾತ್ರದ ಮರವೊಂದು ರಸ್ತೆಗೆ ಅಡ್ಡಲಾಗಿ ಬಿತ್ತು. ಇದರಿಂದಾಗಿ ಮೇಲ್ಪಾಲ್, ಕೊಪ್ಪ, ಬಾಳೆಹೊನ್ನೂರು ರಸ್ತೆ ಸಂಪರ್ಕ ಕಡಿತವಾಗಿದೆ. ಎನ್‌ಆರ್ ಪುರ ತಾಲೂಕಿನ ಅರಳಿ ಕೊಪ್ಪ ತಿರುವಿನಲ್ಲಿ ಘಟನೆ ನಡೆದಿದೆ. ರಸ್ತೆಗೆ ಮರ ಬಿದ್ದ ಕಾರಣಕ್ಕೆ ಮಾರ್ಗ ಬಂದ್‌ ಆಗಿದ್ದು, ಶಾಲಾ-ಕಾಲೇಜಿಗೆ ತೆರಳುವ ವಿದ್ಯಾರ್ಥಿಗಳು ಬದಲಿ ಮಾರ್ಗದಲ್ಲಿ ಸುತ್ತಾಡಿ ಸಂಚರಿಸುವಂತಾಯಿತು.

ಇತ್ತ ಭಾರಿ ಗಾಳಿ ಮಳೆಗೆ ಚಿಕ್ಕಮಗಳೂರು ತಾಲೂಕಿನ ಗಾಳಿಹಳ್ಳಿ, ತಿಮ್ಮನಹಳ್ಳಿ ಗ್ರಾಮಗಳು ತತ್ತರಿಸಿ ಹೋಗಿವೆ. ರಸ್ತೆಯ ಮೇಲೆ ನದಿಯಂತೆ ನೀರು ಹರಿಯುತ್ತಿದ್ದು, ವಾಹನ ಸವಾರರು ಪರದಾಡುತ್ತಿದ್ದಾರೆ. ಮಳೆಯಿಂದಾಗಿ ಸುತ್ತಮುತ್ತಲ ಗ್ರಾಮಗಳಲ್ಲಿ ವಿದ್ಯುತ್ ಸಂಚಾರ ಸ್ಥಗಿತವಾಗಿತ್ತು.

ಇದನ್ನೂ ಓದಿ: Murder case : ಬಯಲು ಶೌಚಾಲಯಕ್ಕೆ ಹೋದ ಬಾಲಕನ ದೊಣ್ಣೆಯಿಂದ ಹೊಡೆದು ಕೊಂದರು

Karnataka Weather Forecast

ರಾಯಚೂರಿನಲ್ಲಿ ಮಳೆಗೆ ಕೊಚ್ಚಿ ಹೋದ ರಸ್ತೆ

ರಾಯಚೂರಿನಲ್ಲಿ ಗುರುವಾರ ರಾತ್ರಿ ಸುರಿದ ಮಳೆಗೆ ರಸ್ತೆಯೇ ಕೊಚ್ಚಿ ಹೋಗಿದೆ. ರಾಯಚೂರು ಗ್ರಾಮೀಣ ತಾಲೂಕಿನ ಬಿ ಯದ್ಲಾಪುರ ಗ್ರಾಮದಲ್ಲಿ ಹಳ್ಳದ ನೀರಿನ ರಭಸಕ್ಕೆ ರಸ್ತೆ ಕೊಚ್ಚಿ ಹೋಗಿದೆ. ಸದ್ಯ ಬಿ ಯದ್ಲಾಪುರ ಮತ್ತು ಗಿಲ್ಲೆಸಗೂರು ಕ್ಯಾಂಪ್ ನಡುವಿನ ಸಂಪರ್ಕ ಕಡಿತವಾಗಿದೆ. ರಸ್ತೆ ಕಡಿತವಾಗಿದ್ದರಿಂದ ರಾಯಚೂರು ಮತ್ತು ಮಂತ್ರಾಲಯಕ್ಕೆ ತೆರಳುವವರಿಗೆ, ವಿದ್ಯಾರ್ಥಿಗಳು ಮತ್ತು ಸಾರ್ವಜನಿಕರು ಪರದಾಡಬೇಕಾಯಿತು.

Karnataka Weather Forecast

ವಿಜಯಪುರದಲ್ಲಿ ಶಾರ್ಟ್‌ ಸರ್ಕ್ಯೂಟ್‌ನಿಂದ ಹೊತ್ತಿ ಉರಿದ ಮರ

ವಿಜಯಪುರ ನಗರದ ನಾಲಬಂದ್ ಗಲ್ಲಿಯಲ್ಲಿ ಶಾರ್ಟ್ ಸರ್ಕ್ಯೂಟ್‌ನಿಂದಾಗಿ ತೆಂಗಿನ ಮರವೊಂದು ಹೊತ್ತಿ ಉರಿದಿದೆ. ಭಾರಿ ಮಳೆಯಿಂದಾಗಿ ತೆಂಗಿನ ಗರಿಯು ವಿದ್ಯುತ್ ಕಂಬದ ಮೇಲೆ ಬಿದ್ದಿದೆ. ಶಾರ್ಟ್ ಸರ್ಕ್ಯೂಟ್‌ನಿಂದಾಗಿ ಇಡೀ ತೆಂಗಿನ ಮರದಲ್ಲಿ ಬೆಂಕಿ ಆವರಿಸಿತ್ತು. ಇದರಿಂದಾಗಿ ಕೆಲಕಾಲ ಆತಂಕ ಉಂಟಾಗಿತ್ತು. ಗೋಳಗುಮ್ಮಟ ಪೊಲೀಸ್ ಠಾಣಾ ವ್ಯಾಪ್ತಿಯಲ್ಲಿ ಘಟನೆ ನಡೆದಿದೆ.

ಚಿಕ್ಕಮಗಳೂರು, ಕೊಪ್ಪಳದಲ್ಲಿ ಮಳೆಗೆ ತುಂಬಿ ಹರಿದ ಹಳ್ಳ ಕೊಳ್ಳಗಳು

ಚಿಕ್ಕಮಗಳೂರಿನಲ್ಲಿ ರಾತ್ರಿಯಿಡೀ ಸುರಿದ ಮಳೆಗೆ ಹಳ್ಳ ಕೊಳ್ಳಗಳು ತುಂಬಿ ಹರಿದವು. ಕಳಸಾಪುರ, ಬೆಳವಾಡಿ, ಕೆ.ಬಿ ಹಾಳ್, ಈಶ್ವರ ಹಳ್ಳಿ ಭಾಗದಲ್ಲಿ ಉತ್ತಮ ಮಳೆಯಾಗಿದೆ. ತುಂಗ, ಭದ್ರಾ ನದಿಗಳ ನೀರಿನ ಮಟ್ಟದಲ್ಲಿ ಏರಿಕೆ ಆಗಿದೆ. ಕುದುರೆಮುಖ ಪರ್ವತ ಶ್ರೇಣಿಯಲ್ಲಿ ಭಾರಿ ಮಳೆ ಹಿನ್ನೆಲೆ ತುಂಗಾ ಹಾಗೂ ಭದ್ರಾ ನದಿಗಳ ನೀರಿನ ಮಟ್ಟದಲ್ಲಿ ಅಲ್ಪ ಪ್ರಮಾಣದ ಏರಿಕೆ ಆಗಿದೆ.

ಕೊಪ್ಪಳದಲ್ಲೂ ಭಾರಿ ಮಳೆಯಾಗುತ್ತಿದ್ದು, ಹಳ್ಳ- ಕೊಳ್ಳಗಳು ತುಂಬಿ ಹರಿಯುತ್ತಿವೆ. ಕೊಪ್ಪಳ ಜಿಲ್ಲೆಯ ಕಾರಟಗಿ ತಾಲೂಕಿನ ಗುಂಡೂರು ಗ್ರಾಮದಲ್ಲಿ ಬ್ರಿಡ್ಜ್ ಮುಳುಗಡೆಗೆ ಕೆಲವೇ ಅಡಿಗಳು ಬಾಕಿ ಇದೆ. ಲಕ್ಷ್ಮೀ ಕ್ಯಾಂಪ್-ಗುಂಡೂರು ರಸ್ತೆ ಸಂಪರ್ಕ ಸೇತುವೆ‌ ಇದಾಗಿದೆ. ಇನ್ನೂ ಬ್ರಿಡ್ಜ್ ಮೇಲೆ ನಿಂತು ತುಂಬಿ ಹರಿಯುತ್ತಿರುವ ಹಳ್ಳವನ್ನು ಕಣ್ತುಂಬಿಕೊಂಡರು.

ರಾಯಚೂರಿನಲ್ಲಿ ವಾಹನ ಸವಾರರ ಪರದಾಟ

ರಾಯಚೂರಲ್ಲಿ ರಾತ್ರಿ ಸುರಿದ ಮಳೆಗೆ ವಾಹನ ಸವಾರರು ಪರದಾಡಿದರು. ಗುರುವಾರ ರಾತ್ರಿ ಸುರಿದ ಮಳೆಯಿಂದಾಗಿ ರೈಲ್ವೆ ಬಿಡ್ಜ್ ಕೆಳಗೆ ನೀರು ನಿಂತು, ತಗ್ಗು ಗುಂಡಿ ತಪ್ಪಿಸಿ ವಾಹನ ಚಲಾಯಿಸಲು ಸವಾರರು ಹರಸಾಹಸ ಪಟ್ಟರು. ರಾಯಚೂರು-ಹೈದ್ರಬಾದ್ ಮಾರ್ಗದ ರಾಷ್ಟ್ರೀಯ ಹೆದ್ದಾರಿಯಲ್ಲಿ ಘಟನೆ ನಡೆದಿದೆ. 2 ಬದಿಯಲ್ಲಿ ಕಿಲೋ ಮೀಟರ್ ಗಟ್ಟಲೆ ಸಾಲುಗಟ್ಟಿ ವಾಹನಗಳು ನಿಂತಿದ್ದವು. ಮಳೆ ನೀರು ಹರಿದು ಹೋಗಲು ಸಮರ್ಪಕ ವ್ಯವಸ್ಥೆ ಇಲ್ಲದೆ ಇರುವುದೇ ಈ ಅವಾಂತರಕ್ಕೆ ಕಾರಣ ಎನ್ನಲಾಗುತ್ತಿದೆ.

ಈ ಸಂಗತಿಯ ಕುರಿತು ನಿಮ್ಮ ಅನಿಸಿಕೆ ಏನು? ಕಾಮೆಂಟ್ ಮೂಲಕ ತಿಳಿಸಿ

Continue Reading
Advertisement
Namma Metro
ಬೆಂಗಳೂರು3 mins ago

Namma Metro: ಮೆಟ್ರೋಗೆ ಕನೆಕ್ಟ್‌ ಆಗಲಿದೆ ನಮ್ಮ ಯಾತ್ರಿ; ಇನ್ಮುಂದೆ ಆಟೋ ಹಿಡಿಯೋ ಟೆನ್ಷನ್‌ ಇಲ್ಲ

Police Station
ದೇಶ11 mins ago

Police Station: ಪೊಲೀಸ್‌ ಸ್ಟೇಷನ್‌ನಲ್ಲೇ ಪತಿ-ಪತ್ನಿ ಸಾವು; ಠಾಣೆಯನ್ನೇ ಸುಟ್ಟರು ಜನ

Milana Nagaraj Anarkali border gown worn
ಸ್ಯಾಂಡಲ್ ವುಡ್39 mins ago

Milana Nagaraj: ಗರ್ಭಿಣಿ ಮಿಲನಾ ನಾಗರಾಜ್‌ ಧರಿಸಿರುವ ಕ್ರಶ್ಡ್ ಅನಾರ್ಕಲಿ ಬಾರ್ಡರ್‌ ಗೌನ್‌ನ ವಿಶೇಷ ಏನು?

Boxer Parveen
ಕ್ರೀಡೆ42 mins ago

Boxer Parveen: ಒಲಿಂಪಿಕ್ಸ್‌ ಕೋಟಾ ಕಳೆದುಕೊಂಡ ಭಾರತದ ಬಾಕ್ಸರ್‌ ಪರ್ವೀನ್‌

Famous Food of bangalore
ಆಹಾರ/ಅಡುಗೆ1 hour ago

Famous Food of Bangalore: ಬೆಂಗಳೂರಿಗೆ ಬಂದಾಗ ಈ ಖಾದ್ಯಗಳ ರುಚಿ ನೋಡಲು ಮರೆಯಬೇಡಿ!

Prime Minister of India
ರಾಜಕೀಯ1 hour ago

Prime Minister Of India: ಸುದೀರ್ಘ ಕಾಲ ಪ್ರಧಾನಿಯಾಗಿದ್ದ ನೆಹರೂ, ಇಂದಿರಾ ದಾಖಲೆಯನ್ನು ಮೋದಿ ಮುರಿಯಲು ಸಾಧ್ಯವೆ?

RCB FANS BIKE RALLY
ಕ್ರೀಡೆ1 hour ago

RCB FANS BIKE RALLY: ಪಂದ್ಯಕ್ಕೂ ಮುನ್ನವೇ ಬೃಹತ್​ ಬೈಕ್​ ರ‍್ಯಾಲಿ ಮಾಡಿದ ಆರ್​ಸಿಬಿ ಅಭಿಮಾನಿಗಳು; ವಿಡಿಯೊ ವೈರಲ್​​

Pavithra Jayaram Chandrakant are just friends, daughter said
ಕಿರುತೆರೆ1 hour ago

Pavithra Jayaram: ಚಂದ್ರಕಾಂತ್‌ ಹಾಗೂ ನನ್ನ ಅಮ್ಮ ಜಸ್ಟ್‌ ಫ್ರೆಂಡ್ಸ್‌, ಪವಿತ್ರಾ ಮಗಳ ಸ್ಪಷ್ಟನೆ!

Powerful Bike
ಪ್ರಮುಖ ಸುದ್ದಿ1 hour ago

Powerful Bikes : 2.5 ಲಕ್ಷ ರೂ.ಗಿಂತಲೂ ಕಡಿಮೆ ಬೆಲೆಗೆ ಸಿಗ್ತವೆ ಈ 5 ಪವರ್​ಫುಲ್ ಬೈಕ್​ಗಳು

Road Accident
ಶಿವಮೊಗ್ಗ2 hours ago

Road Accident : ಬಸ್ ಹತ್ತುವಾಗ ಆಯತಪ್ಪಿ ಬಿದ್ದ ಮಹಿಳೆ; ಚಕ್ರಕ್ಕೆ ಸಿಲುಕಿ ಸಾವು

Sharmitha Gowda in bikini
ಕಿರುತೆರೆ7 months ago

Geetha Serial Kannada: ನಿದ್ದೆ ಕದ್ದ ಚೋರಿ! ನಟಿ `ಭಾನುಮತಿ’ ಹಾಟ್‌ ಪೋಟೊಗಳಿಗೆ ಫ್ಯಾನ್ಸ್ ಫುಲ್ ಫಿದಾ

Kannada Serials
ಕಿರುತೆರೆ7 months ago

Kannada Serials TRP: 2ನೇ ಸ್ಥಾನದಲ್ಲಿ 2 ಧಾರಾವಾಹಿಗಳು; ಟಿಆರ್‌ಪಿ ರೇಸ್‌ನಲ್ಲಿಲ್ಲ ಭಾಗ್ಯಲಕ್ಷ್ಮೀ!

Bigg Boss- Saregamapa 20 average TRP
ಕಿರುತೆರೆ7 months ago

Kannada Serials TRP: ಏಳನೇ ಸ್ಥಾನಕ್ಕೆ ʻಅಮೃತಧಾರೆʼ ಕುಸಿತ; ಬಿಗ್‌ ಬಾಸ್‌-ಸರಿಗಮಪ ಟಿಆರ್‌ಪಿ ಎಷ್ಟು?

galipata neetu
ಕಿರುತೆರೆ6 months ago

Kanyadana Serial: ಕಿರುತೆರೆಗೆ ಮತ್ತೆ ಎಂಟ್ರಿ ಕೊಟ್ಟ ʻಗಾಳಿಪಟʼ ಖ್ಯಾತಿಯ ʻನೀತುʼ!

Kannada Serials
ಕಿರುತೆರೆ8 months ago

Kannada Serials TRP: ನಾಲ್ಕನೇ ಸ್ಥಾನಕ್ಕೆ ಕುಸಿತ ಕಂಡ ʻಸೀತಾ ರಾಮʼ; ಟಿಆರ್‌ಪಿ ರೇಸ್‌ಗೆ ʻಭಾಗ್ಯಲಕ್ಷ್ಮಿʼ ಬ್ಯಾಕ್‌!

Kannada Serials
ಕಿರುತೆರೆ7 months ago

Kannada Serials TRP: ಟಿಆರ್‌ಪಿಯಲ್ಲಿ ʻಭಾಗ್ಯಲಕ್ಷ್ಮೀʼ ಹವಾ; ʻಪುಟ್ಟಕ್ಕನ ಮಕ್ಕಳುʼ ಧಾರಾವಾಹಿಗೆ ಸಂಕಷ್ಟ!

Bigg Boss' dominates TRP; Sita Rama fell to the sixth position
ಕಿರುತೆರೆ7 months ago

Kannada Serials TRP: ಟಿಆರ್‌ಪಿಯಲ್ಲಿ ʻಬಿಗ್ ಬಾಸ್ʼದೇ ಮೇಲುಗೈ; 6ನೇ ಸ್ಥಾನಕ್ಕೆ ಕುಸಿದ ʻಸೀತಾ ರಾಮʼ

geetha serial Dhanush gowda engagement
ಕಿರುತೆರೆ5 months ago

Dhanush Gowda: ಗೀತಾ ಧಾರಾವಾಹಿ ನಟನ ನಿಶ್ಚಿತಾರ್ಥ; ಭವ್ಯಾಳ ಕಮೆಂಟ್‌ ಬಾಕ್ಸ್‌ ಆಫ್‌!

varun
ಕಿರುತೆರೆ6 months ago

Brindavana Serial: ʼಬೃಂದಾವನʼ ಧಾರಾವಾಹಿಯಲ್ಲಿ ದೊಡ್ಡ ಟ್ವಿಸ್ಟ್‌; ಪ್ರಮುಖ ಪಾತ್ರಧಾರಿಯೇ ಬದಲು

Kannada Serials
ಕಿರುತೆರೆ8 months ago

Kannada Serials TRP: ಟಿಆರ್‌ಪಿಯಲ್ಲಿ ಏರಿಕೆ ಕಂಡ ʻಅಮೃತಧಾರೆʼ; ʻಗಟ್ಟಿಮೇಳʼಕ್ಕೆ ನಾಲ್ಕನೇ ಸ್ಥಾನ!

Prajwal Revanna Case JDS calls CD Shivakumar pen drive gang
ರಾಜಕೀಯ19 hours ago

Prajwal Revanna Case: CD ಶಿವಕುಮಾರ್ ಪೆನ್ ಡ್ರೈವ್ ಗ್ಯಾಂಗ್ ಎಂದ ಕುಟುಕಿದ ಜೆಡಿಎಸ್‌!

Karnataka weather Forecast
ಮಳೆ1 day ago

Karnataka Weather : ಮೈಸೂರು, ಮಂಡ್ಯ ಸೇರಿ ಈ 7 ಜಿಲ್ಲೆಗಳಲ್ಲಿ ವ್ಯಾಪಕ ಮಳೆ ಸಂಭವ

Dina Bhavishya
ಭವಿಷ್ಯ1 day ago

Dina Bhavishya : ಈ ರಾಶಿಯ ಪ್ರೇಮಿಗಳಿಗೆ ಮನೆಯಿಂದ ಸಿಗುತ್ತೆ ಗ್ರೀನ್‌ ಸಿಗ್ನಲ್‌

Karnataka Weather Forecast
ಮಳೆ2 days ago

Karnataka Weather : ಭಾರಿ ಮಳೆಗೆ ಕೊಟ್ಟೂರು ಬಸ್ ಸ್ಟ್ಯಾಂಡ್‌ ಜಲಾವೃತ; ‌ ತಾಯಿ-ಮಗ ಗ್ರೇಟ್‌ ಎಸ್ಕೇಪ್‌

Drowned in water
ಹಾಸನ2 days ago

Drowned in water : ಕೆರೆಯಲ್ಲಿ ಈಜಲು ಹೋದ ನಾಲ್ವರು ನೀರುಪಾಲು; ಓರ್ವ ಬಾಲಕ ಪಾರು

Suspicious Case
ಬೆಂಗಳೂರು2 days ago

Suspicious Case : ಬಾತ್‌ ರೂಂನಲ್ಲಿತ್ತು ಕಾಲೇಜು ಹುಡುಗಿ ಡೆಡ್‌ ಬಾಡಿ; ಕುತ್ತಿಗೆ ಕೊಯ್ದು ಸಾಯಿಸಿದವರು ಯಾರು?

Prajwal Revanna Case
ಕರ್ನಾಟಕ3 days ago

Prajwal Revanna Case: ಪ್ರಜ್ವಲ್‌ ರೇವಣ್ಣ ಇಂದೇ ಜರ್ಮನಿಯಿಂದ ಭಾರತಕ್ಕೆ? ಎಸ್‌ಐಟಿ ಅಲರ್ಟ್‌

Dina Bhavishya
ಭವಿಷ್ಯ3 days ago

Dina Bhavishya : ಭೂ ವ್ಯವಹಾರಕ್ಕೆ ಇದು ಸೂಕ್ತ ಸಮಯ; ವ್ಯಾಪಾರದಲ್ಲಿ ಡಬಲ್‌ ಲಾಭ

HD Revanna Released first reaction after release will be acquitted of all charges
ರಾಜಕೀಯ4 days ago

HD Revanna Released: ರಿಲೀಸ್‌ ಬಳಿಕ ರೇವಣ್ಣ ಫಸ್ಟ್‌ ರಿಯಾಕ್ಷನ್;‌ ನ್ಯಾಯಾಂಗದ ಮೇಲೆ ನಂಬಿಕೆ ಇದೆ; ಆರೋಪ ಮುಕ್ತನಾಗುವೆ

CM Siddaramaiah says Our government is stable for 5 years BJP will disintegrate
Lok Sabha Election 20244 days ago

CM Siddaramaiah: ನಮ್ಮ ಸರ್ಕಾರ 5 ವರ್ಷ ಸುಭದ್ರ; ಚುನಾವಣೆ ಬಳಿಕ ಬಿಜೆಪಿ ಛಿದ್ರ ಎಂದ ಸಿಎಂ ಸಿದ್ದರಾಮಯ್ಯ!

ಟ್ರೆಂಡಿಂಗ್‌