Yadgiri News: ಕುಡಿಯುವ ನೀರಿನ ಸಮಸ್ಯೆಗೆ ಸ್ಪಂದಿಸಲು ತಾಲೂಕು ಮಟ್ಟದಲ್ಲಿ ‌ಕಂಟ್ರೋಲ್ ರೂಮ್ ತೆರೆಯಲು ಡಿಸಿ ಸೂಚನೆ - Vistara News

ಯಾದಗಿರಿ

Yadgiri News: ಕುಡಿಯುವ ನೀರಿನ ಸಮಸ್ಯೆಗೆ ಸ್ಪಂದಿಸಲು ತಾಲೂಕು ಮಟ್ಟದಲ್ಲಿ ‌ಕಂಟ್ರೋಲ್ ರೂಮ್ ತೆರೆಯಲು ಡಿಸಿ ಸೂಚನೆ

Yadgiri News: ಯಾದಗಿರಿ ಜಿಲ್ಲೆಯಲ್ಲಿ ಕುಡಿಯುವ ನೀರಿಗೆ ತೊಂದರೆಯಾಗದಂತೆ ಕ್ರಮ ಕೈಗೊಳ್ಳುವ ನಿಟ್ಟಿನಲ್ಲಿ ಪ್ರತಿ ತಾಲೂಕು ಮಟ್ಟದಲ್ಲಿ ‌ಕಂಟ್ರೋಲ್ ರೂಂ ತೆರೆದು, ಸಾರ್ವಜನಿಕ ಸಮಸ್ಯೆಗಳಿಗೆ ಅಧಿಕಾರಿಗಳು ಸ್ಪಂದಿಸಿ, ಬರ ಎದುರಿಸಲು ಸನ್ನದ್ಧರಾಗಬೇಕು ಎಂದು ಡಿಸಿ ಡಾ.ಸುಶೀಲ ಬಿ. ಸೂಚನೆ ನೀಡಿದ್ದಾರೆ.

VISTARANEWS.COM


on

DC instructs to open control room at taluk level to respond to drinking water problem
ಮಹತ್ವದ, ಕುತೂಹಲಕರ ಸುದ್ದಿಗಾಗಿ ಫಾಲೊ ಮಾಡಿ
Koo

ಯಾದಗಿರಿ: ಜಿಲ್ಲೆಯಲ್ಲಿ ಕುಡಿಯುವ ನೀರಿಗೆ (Drinking Water) ತೊಂದರೆಯಾಗದಂತೆ ಕ್ರಮ ಕೈಗೊಳ್ಳುವ ನಿಟ್ಟಿನಲ್ಲಿ ಪ್ರತಿ ತಾಲೂಕು ಮಟ್ಟದಲ್ಲಿ ‌ಕಂಟ್ರೋಲ್ ರೂಂ ತೆರೆದು ಸಾರ್ವಜನಿಕ ಸಮಸ್ಯೆಗಳನ್ನು ತಮ್ಮ ಮನೆಯ ಸಮಸ್ಯೆಗಳೆಂದು ಭಾವಿಸಿ ಅಧಿಕಾರಿಗಳು ಸ್ಪಂದಿಸಿ, ಬರ ಎದುರಿಸಲು ಸನ್ನದ್ಧರಾಗಬೇಕು ಎಂದು ಜಿಲ್ಲಾಧಿಕಾರಿ ಡಾ.ಸುಶೀಲ ಬಿ. (Yadgiri News) ಸೂಚಿಸಿದರು.

ನಗರದ ಜಿಲ್ಲಾಧಿಕಾರಿ ಕಚೇರಿಯ ಸಭಾಂಗಣದಲ್ಲಿ ಕುಡಿಯುವ ನೀರಿನ ಸಮಸ್ಯೆ ಪರಿಹರಿಸುವ ಕುರಿತು ಸಂಬಂಧಿಸಿದ ಅಧಿಕಾರಿಗಳೊಂದಿಗೆ ಸಭೆ ನಡೆಸಿ ಅವರು ಮಾತನಾಡಿದರು.

ಎಲ್ಲಾ ಅಧಿಕಾರಿಗಳು ಕೇಂದ್ರ ಸ್ಥಾನದಲ್ಲಿಯೇ ಇರಬೇಕು. ನಿಮ್ಮ ವ್ಯಾಪ್ತಿಯಲ್ಲಿ ಸಮಸ್ಯೆ ಕಂಡು ಬಂದಾಗ ಸಂಬಂಧಿಸಿದ ಅಧಿಕಾರಿಗಳು ಗೈರಾಗಿದ್ದರೆ ಅದಕ್ಕೆ ಅವರೇ ನೇರ ಹೊಣೆಗಾರರನ್ನಾಗಿ ಸೂಕ್ತ ಕ್ರಮ ಕೈಗೊಳ್ಳಲಾಗುವುದು ಎಂದು ತಿಳಿಸಿದರು.

ಇದನ್ನೂ ಓದಿ: Vande Bharat: ಮದುರೈನಿಂದ ಬೆಂಗಳೂರಿಗೆ ಶೀಘ್ರವೇ ವಂದೇ ಭಾರತ್‌ ರೈಲು; ಬೆಲೆ ಎಷ್ಟು?

ಜಿಲ್ಲೆಯ ಆರು ತಾಲೂಕುಗಳನ್ನು ಸರ್ಕಾರವು ಬರ ಪೀಡಿತ ಪ್ರದೇಶವೆಂದು ಘೋಷಣೆ ಮಾಡಿದೆ. ಕುಡಿಯುವ ನೀರಿನ ಸಮಸ್ಯೆಯನ್ನು ಎದುರಿಸುತ್ತಿರುವ ಗ್ರಾಮಗಳನ್ನು ಗುರುತಿಸಿ ಆ ಗ್ರಾಮಗಳಿಗೆ ಶುದ್ಧ ಕುಡಿಯುವ ನೀರು ಸರಬರಾಜು ಕುರಿತಂತೆ ಅಧಿಕಾರಿಗಳು ಆಯಾ ಗ್ರಾಮಗಳ ಜನರನ್ನು ಸಂಪರ್ಕಿಸಿ ನೀರಿನ ಸಮಸ್ಯೆ ಪರಿಹರಿಸುವ ಕುರಿತು ಸೂಕ್ತ ಕ್ರಮ ಕೈಗೊಳ್ಳಬೇಕು, ನಿರ್ಲಕ್ಷ್ಯ ವಹಿಸಿದರೆ ಸಂಬಂಧಿಸಿದ ಅಧಿಕಾರಿಗಳೇ ನೇರ ಹೊಣೆಯಾಗುತ್ತೀರಿ ಎಂದು ಕಟ್ಟುನಿಟ್ಟಿನ ಸೂಚನೆ ನೀಡಿದರು.

ಗ್ರಾಮವಾರು ಜನರಿಗೆ ಕುಡಿಯುವ ನೀರು ದಿನನಿತ್ಯ ಲಭ್ಯವಾಗುತ್ತಿರುವ ಬಗ್ಗೆ ಖಾತರಿಪಡಿಸಿಕೊಳ್ಳಬೇಕು. ಕುಡಿಯುವ ನೀರಿನ ಸಮಸ್ಯೆ ಪರಿಹರಿಸುವ ಕುರಿತಂತೆ ಆಯಾ ಗ್ರಾಮ ಪಂಚಾಯಿತಿ ಮೂಲಕ ಕೈಗೊಂಡ ಕ್ರಮಗಳ ಬಗ್ಗೆ ಪರಿಶೀಲಿಸಬೇಕು ಎಂದರು.

ಇದನ್ನೂ ಓದಿ: Veerappan Case : ಪೊಲೀಸರ ಹತ್ಯೆ; ವೀರಪ್ಪನ್‌ ಗ್ಯಾಂಗ್‌ನಲ್ಲಿದ್ದ ಸ್ಟೆಲ್ಲಾ ಮೇರಿಗೆ ಖುಲಾಸೆ

ಜಿಲ್ಲೆಯಲ್ಲಿ ಆರ್ಸೆನಿಕ್, ಪ್ಲೋರೋಸಿಸ್ ಪ್ರದೇಶಗಳನ್ನು ಗುರುತಿಸಿ ಜನರಲ್ಲಿ ಸೂಕ್ತ ಅರಿವು ಮೂಡಿಸಬೇಕು. ಕುಡಿಯುವ ನೀರಿಗೆ ಚರಂಡಿ ನೀರು ಸೇರಿ ಕಲುಷಿತಗೊಳ್ಳದಂತೆ ಮುನ್ನೆಚ್ಚರಿಕೆ ವಹಿಸಬೇಕು. ಕುಡಿಯುವ ನೀರಿಗೆ ಸಂಬಂಧಿಸಿದಂತೆ ಬಾಕಿ ಕಾಮಗಾರಿಗಳನ್ನು ಆದ್ಯತೆ ಮೇಲೆ ಪೂರ್ಣಗೊಳಿಸಲು ವಿಶೇಷ ಗಮನ ಹರಿಸಬೇಕು. ಕುಡಿಯುವ ನೀರಿನ ಮೂಲಗಳ ಬೋರ್‌ವೆಲ್, ಪ್ಲೇಸಿಂಗ್ ಸೇರಿದಂತೆ ಇನ್ನಿತರ ಮುನ್ನೆಚ್ಚರಿಕೆ ಕ್ರಮಗಳನ್ನು ಕೈಗೊಳ್ಳುವಂತೆ ಅವರು ಸೂಚನೆ ನೀಡಿದರು.

ನಗರಸಭೆ ಸಂಸ್ಥೆಗಳ ವ್ಯಾಪ್ತಿಯಲ್ಲಿ ಸಹ ಕುಡಿಯುವ ನೀರು ಪೂರೈಕೆ ಬಗ್ಗೆ ಸೂಕ್ತ ನಿಗಾ ವಹಿಸಬೇಕು ಎಂದು ತಿಳಿಸಿದರು.

ಇದನ್ನೂ ಓದಿ: Boar Attack : ಹಂದಿಗಳ ಕಾಟಕ್ಕೆ ಮನೆ ಬಿಟ್ಟು ಹೋದ್ರು ಹೆಂಡ್ತಿ-ಮಕ್ಕಳು!

ಈ ಸಂದರ್ಭದಲ್ಲಿ ಜಿಲ್ಲಾ ಪಂಚಾಯಿತಿ ಮುಖ್ಯ ಕಾರ್ಯನಿರ್ವಾಹಣಾಧಿಕಾರಿ ಗರಿಮಾ ಪನ್ವಾರ ಸೇರಿದಂತೆ ಜಿಲ್ಲಾಮಟ್ಟದ ಅಧಿಕಾರಿಗಳು, ತಹಸೀಲ್ದಾರರು, ತಾ.ಪಂ. ಇಒ, ಗ್ರಾಮ ಪಂಚಾಯತಿ ಅಭಿವೃದ್ಧಿ ಅಧಿಕಾರಿಗಳು ಉಪಸ್ಥಿತರಿದ್ದರು.

ಕ್ಷಣ ಕ್ಷಣದ ಮಾಹಿತಿಗಾಗಿ Vistara News FaceBook ಪೇಜ್ ಫಾಲೋ ಮಾಡಿ
ಮಹತ್ವದ ಮಾಹಿತಿಗಾಗಿ ವಿಸ್ತಾರ ನ್ಯೂಸ್ ಆ್ಯಪ್ ಉಚಿತವಾಗಿ ಡೌನ್ ಲೋಡ್ ಮಾಡಿಕೊಳ್ಳಿ: Andriod App | IOS App

ಮಳೆ

Karnataka Weather : ಭಾರಿ ಮಳೆಗೆ ಕೆರೆಯಂತಾದ ರಸ್ತೆಗಳು; ಮುಳುಗಡೆಯಾದ ವಾಹನಗಳು

Rain News : ಬೆಂಗಳೂರು ಸೇರಿದಂತೆ ಹಲವೆಡೆ ಮಳೆಯು ಅಬ್ಬರಿಸುತ್ತಿದ್ದು, ಅವಾಂತರವೇ ಸೃಷ್ಟಿಯಾಗಿದೆ. ಮುಂದಿನ ಐದು ದಿನಗಳು ಗುಡುಗು ಸಹಿತ ಭಾರಿ ಮಳೆಯಾಗುವ ಮುನ್ಸೂಚನೆಯನ್ನು ಹವಾಮಾನ ಇಲಾಖೆ (Karnataka Weather Forecast) ನೀಡಿದೆ.

VISTARANEWS.COM


on

By

Karnataka Weather Forecast
Koo

ಬೆಂಗಳೂರು: ವೀಕೆಂಡ್‌ ಮೂಡ್‌ನಲ್ಲಿದ್ದ ಜನರಿಗೆ ಮಳೆರಾಯನ (Rain News) ಎಂಟ್ರಿ ಕೊಂಚ ಕಿರಿಕಿರಿಯನ್ನುಂಟು ಮಾಡಿದೆ. ಬೆಳಗ್ಗೆ ಬಿಸಿಲಿನಿಂದ ಕಂಗೆಟ್ಟ ಜನರಿಗೆ ಮಧ್ಯಾಹ್ನ ಆಗುತ್ತಿದ್ದಂತೆ ಮೋಡ ಕವಿದ ವಾತಾವರಣ ಇತ್ತು. ನೋಡನೋಡುತ್ತಿದ್ದಂತೆ ಗುಡುಗು ಸಹಿತ ಧಾರಾಕಾರ ಮಳೆ (Karnataka Weather Forecast) ಸುರಿದಿತ್ತು. ರಾಜಧಾನಿ ಬೆಂಗಳೂರಲ್ಲಿ ಬಿಡುವು ನೀಡಿದ್ದ ವರುಣ ವಾರದ ನಂತರ ಅಬ್ಬರಿಸಿದ್ದ. ಜಸ್ಟ್‌ ಒಂದೂವರೆ ಗಂಟೆಯ ಮಳೆಗೆ ರಸ್ತೆಗಳು ಜಲಾವೃತಗೊಂಡು ವಾಹನ ಸವಾರರು ಪರದಾಡಬೇಕಾಯಿತು.

ಶೇಷಾದ್ರಿಪುರಂ, ಶಿವಾನಂದ ಸರ್ಕಲ್, ವಿಜಯನಗರ, ಶಿವಾಜಿನಗರ ಸೇರಿದಂತೆ ಮಲ್ಲೇಶ್ವರಂ, ವಸಂತನಗರ, ಶಾಂತಿನಗರ, ಜಯನಗರ, ಯಶವಂತಪುರ, ರಾಜಾಜಿನಗರ, ಕೋರಮಂಗಲ ಹಾಗೂ ಎಂಜಿ ರಸ್ತೆ, ಕಬ್ಬನ್ ಪಾರ್ಕ್ ಸೇರಿದಂತೆ ನಗರದ ಹಲವೆಡೆ ಮಳೆಯಾಗಿತ್ತು.

ಮುಳುಗಡೆಯಾದ ಸಹಕಾರ

ಮಹಾದೇವಪುರ ಸುತ್ತಮುತ್ತ ಒಂದು ಗಂಟೆಗೂ ಹೆಚ್ಚು ಕಾಲ ಭಾರಿ ಮಳೆ ಸುರಿದಿದೆ. ಮಳೆಗೆ ಸಹಕಾರ ನಗರದ ಜಿ ಬ್ಲಾಕ್‌ನ ರಸ್ತೆಗಳಲ್ಲಿ ನೀರು ತುಂಬಿ ಹರಿದಿತ್ತು. ಇದರಿಂದಾಗಿ ಅಂಗಡಿ ಮುಂಗಟ್ಟುಗಳಲ್ಲಿ ನೀರು ನಿಂತಿದ್ದರಿಂದ ಜನರು ಪರದಾಡಬೇಕಾಯಿತು. ಪಾದಚಾರಿಗಳು ಮತ್ತು ವಾಹನ ಸವಾರರು ರಸ್ತೆ ದಾಟಲು ಪರದಾಡಬೇಕಾಯಿತು. ಇನ್ನೂ ದಿಢೀರ್‌ ಮಳೆಗೆ ವಾಹನ ಸವಾರರು ಬಸ್ ನಿಲ್ದಾಣಗಳಲ್ಲಿ ಆಶ್ರಯ ಪಡೆದರು.

Karnataka weather Forecast

ಆನೇಕಲ್‌ನಲ್ಲೂ ಮಳೆ ಅಬ್ಬರ

ಆನೇಕಲ್ ತಾಲೂಕಿನಾದ್ಯಂತ ಮಳೆಯು ಅಬ್ಬರಿಸಿತ್ತು. ಆನೇಕಲ್, ಚಂದಾಪುರ, ಅತ್ತಿಬೆಲೆ, ಹೆಬ್ಬಗೋಡಿ, ಎಲೆಕ್ಟ್ರಾನಿಕ್ ಸಿಟಿ ಭಾಗದಲ್ಲಿ ಮಳೆಯಾಗಿದೆ. ಚಂದಾಪುರದ ಬಳಿ ಸರ್ವೀಸ್ ರಸ್ತೆ ಜಲಾವೃತಗೊಂಡಿತ್ತು. ಇದರಿಂದಾಗಿ ಬೈಕ್ ಸವಾರರು, ಪಾದಚಾರಿಗಳು ಹಾಗೂ ವಾಹನ ಸವಾರ ಪರದಾಡಬೇಕಾಯಿತು. ಮಳೆ ನೀರು ಹೊರ ಹೋಗಲು ಜಾಗವಿಲ್ಲದೆ ರಸ್ತೆಯು ಕೆರೆಯಂತಾಗಿತ್ತು.

ಇದನ್ನೂ ಓದಿ: Liquor Ban : ಮುಂದಿನ ಏಳು ದಿನಗಳಲ್ಲಿ ನಾಲ್ಕೂವರೆ ದಿನ ಬಾರ್ ಕ್ಲೋಸ್; ಎಣ್ಣೆ ಸಿಗೋದು ಯಾವ ದಿನ?

ಚಿಕ್ಕಮಗಳೂರಿನಲ್ಲೂ ಮಳೆಯ ಸಿಂಚನ

ಶನಿವಾರದಂದು ಚಿಕ್ಕಮಗಳೂರು ಜಿಲ್ಲೆಯ ಹಲವಡೆ ಭಾರಿ ಮಳೆಯಾಗಿದೆ. ಚಿಕ್ಕಮಗಳೂರು ನಗರ, ಬೆಳವಾಡಿ, ಕಳಸಾಪುರ, ಮಾಗಡಿ, ಅಂಬಳೆ, ತೇಗೂರು, ಮೂಡಿಗೆರೆ, ಕೊಪ್ಪ, ಶೃಂಗೇರಿ, ಕಡೂರು ತಾಲೂಕಿನ ಹಲವೆಡೆ ಧಾರಾಕಾರ ಮಳೆಯಾಗಿದೆ. ಭಾರಿ ಬಿರುಗಾಳಿ ಮಳೆಗೆ ಚಿಕ್ಕಮಗಳೂರು ಗ್ರಾಮಾಂತರ ತತ್ತರಿಸಿತ್ತು. ಮಳೆಯಿಂದಾಗಿ ಚಿಕ್ಕಮಗಳೂರು ನಗರದಲ್ಲಿ ಜನಜೀವನ ಅಸ್ತವ್ಯಸ್ತವಾಗಿತ್ತು. ಗುಡುಗು ಸಿಡಿಲು ಸಹಿತ ಸುರಿದ ಮಳೆಗೆ ಹಳ್ಳ ಕೊಳ್ಳಗಳು ಉಕ್ಕಿ ಹರಿದಿದೆ.

ಮೇಲ್ಮೈ ಸುಳಿಗಾಳಿ ಹಿನ್ನೆಲೆ ಇನ್ನೈದು ದಿನ ಭಾರಿ ಮಳೆ

ಅರಬ್ಬಿ ಸಮುದ್ರದ ಆಗ್ನೇಯ ಭಾಗದಲ್ಲಿ ಮೇಲ್ಮೈ ಸುಳಿಗಾಳಿ ಹಿನ್ನೆಲೆಯಲ್ಲಿ ರಾಜ್ಯದಲ್ಲಿ‌ ಮುಂದಿನ ಐದು ದಿನಗಳ‌ ಕಾಲ ಭಾರಿ‌ ಮಳೆಯಾಗಲಿದೆ ಎಂದು ಹವಾಮಾನ ಇಲಾಖೆ ಮುನ್ಸೂಚನೆಯನ್ನು ನೀಡಿದೆ. ಗುಡುಗು, ಮಿಂಚು ಸಹಿತ ಭಾರಿ ಮಳೆಯಾಗುವ ಸಾಧ್ಯತೆ ಇದೆ. ಸದ್ಯ ಮುಂಗಾರು ಕೇರಳ ರಾಜ್ಯವನ್ನು ಪ್ರವೇಶಿಸಿದ್ದು, ನಂತರ ಕರ್ನಾಟಕವನ್ನು ಆವರಿಸಲಿದೆ.

ಈ ಭಾರಿ ಅವಧಿಗೂ ಮೊದಲೇ ಮುಂಗಾರು ಪ್ರವೇಶವಾಗುತ್ತಿದೆ. ಕಳೆದ ವರ್ಷ ಕರ್ನಾಟಕದಲ್ಲಿ ಜೂನ್ 15ಕ್ಕೆ ಮುಂಗಾರು ಪ್ರವೇಶವಾಗಿತ್ತು. ಆದರೆ ಈ ವರ್ಷ 15 ದಿನಗಳಿಗೂ ಮೊದಲೇ ಮುಂಗಾರು ಪ್ರವೇಶವಾಗುತ್ತಿದೆ. ಈ ಬಾರಿ ಉತ್ತಮ ಮಳೆಯಾಗುವ ಸೂಚನೆಯನ್ನು ಹವಾಮಾನ ತಜ್ಞರು ನೀಡಿದ್ದಾರೆ.

ಈ ಸಂಗತಿಯ ಕುರಿತು ನಿಮ್ಮ ಅನಿಸಿಕೆ ಏನು? ಕಾಮೆಂಟ್ ಮೂಲಕ ತಿಳಿಸಿ

Continue Reading

ಮಳೆ

Karnataka Weather : ವಾರಾಂತ್ಯದಲ್ಲಿ ಈ ಜಿಲ್ಲೆಗಳಲ್ಲಿ ಮಿಸ್‌ಯಿಲ್ಲದೇ ಮಳೆ ಹಾಜರ್‌

Rain News : ವಾರಾಂತ್ಯದಲ್ಲಿ ಹಲವೆಡೆ ಗುಡುಗು, ಮಿಂಚು ಸಹಿತ ಮಳೆಯಾಗುವ ನಿರೀಕ್ಷೆ ಇದೆ. ಗಾಳಿ ವೇಗವು 30-40 ಕಿ.ಮೀ ವ್ಯಾಪ್ತಿಯಲ್ಲಿ ಬೀಸಲಿದೆ ಎಂದು ಹವಾಮಾನ ಇಲಾಖೆ ಮುನ್ಸೂಚನೆಯನ್ನು (Karnataka Weather Forecast) ನೀಡಿದೆ.

VISTARANEWS.COM


on

By

Karnataka Weather Forecast
ಸಾಂದರ್ಭಿಕ ಚಿತ್ರ
Koo

ಬೆಂಗಳೂರು: ಜೂನ್‌ 1ರಂದು ದಕ್ಷಿಣ ಒಳನಾಡು, ಮಲೆನಾಡು ಮತ್ತು ಕರಾವಳಿಯಲ್ಲಿ ಪ್ರತ್ಯೇಕವಾಗಿ ಹಗುರದಿಂದ ಸಾಧಾರಣ ಮಳೆಯಾಗುವ (Rain News) ಸಾಧ್ಯತೆ ಇದೆ. ರಾಜ್ಯದ ಪ್ರತ್ಯೇಕ ಸ್ಥಳಗಳಲ್ಲಿ ಗುಡುಗು, ಮಿಂಚು ಮತ್ತು 30-40 ಕಿ.ಮೀ ವ್ಯಾಪ್ತಿಯಲ್ಲಿ ಗಾಳಿ ಬೀಸುವ (Karnataka Weather Forecast) ಸಾಧ್ಯತೆಯಿದೆ.

ದಕ್ಷಿಣ ಒಳನಾಡಿನ ಮಂಡ್ಯ, ಮೈಸೂರು, ಬೆಂಗಳೂರು ನಗರ, ಬೆಂಗಳೂರು ಗ್ರಾಮಾಂತರ, ಕೋಲಾರ, ರಾಮನಗರ ಮತ್ತು ಚಾಮರಾಜನಗರದಲ್ಲಿ ಚದುರಿದಂತೆ ಹಗುರದಿಂದ ಸಾಧಾರಣ ಮಳೆಯಾಗುವ ಸಾಧ್ಯತೆಯಿದೆ. ಉಳಿದ‌ಂತೆ ಯಾವುದೇ ಮಳೆ ಮುನ್ಸೂಚನೆ ಇಲ್ಲ.

ಉತ್ತರ ಒಳನಾಡಿನ ಬೆಳಗಾವಿ, ಧಾರವಾಡ ಮತ್ತು ಹಾವೇರಿ ಜಿಲ್ಲೆಗಳಲ್ಲಿ ಪ್ರತ್ಯೇಕವಾಗಿ ಹಗುರವಾದ ಮಳೆಯಾಗಲಿದೆ. ಉಳಿದ ಭಾಗಗಳಲ್ಲಿ ಒಣ ಹವೆ ಮೇಲುಗೈ ಸಾಧಿಸಲಿದೆ.

ಇನ್ನೂ ಮಲೆನಾಡಿನ ಹಾಸನ, ಕೊಡಗು, ಚಿಕ್ಕಮಗಳೂರು, ಶಿವಮೊಗ್ಗದಲ್ಲಿ ಗುಡುಗು ಸಹಿತ ಸಾಧಾರಣ ಮಳೆಯಾಗಲಿದೆ. ಕರಾವಳಿಯ ದಕ್ಷಿಣ ಕನ್ನಡ, ಉಡುಪಿ, ಉತ್ತರ ಕನ್ನಡ ಭಾಗದಲ್ಲಿ ಸಾಧಾರಣ ಮಳೆಯ ನಿರೀಕ್ಷೆ ಇದೆ.

ಬೆಂಗಳೂರಿಗೂ ಮಳೆ ಮುನ್ಸೂಚನೆ

ಬೆಂಗಳೂರು ವ್ಯಾಪ್ತಿಯ ಪ್ರತ್ಯೇಕ ಕಡೆಗಳಲ್ಲಿ ಗುಡುಗು ಸಹಿತ ಮಳೆಯಾಗುವ ಸಾಧ್ಯತೆ ಇದೆ. ಗರಿಷ್ಠ ಉಷ್ಣಾಂಶ 32 ಡಿಗ್ರಿ ಸೆಲ್ಸಿಯಸ್ ಇರಲಿದ್ದು, ಕನಿಷ್ಠ ಉಷ್ಣಾಂಶ 22 ಡಿಗ್ರಿ ಸೆಲ್ಸಿಯಸ್ ಇರಲಿದೆ.

ಇದನ್ನೂ ಓದಿ: Exit Poll: ಈ ಹಿಂದೆ 5 ಬಾರಿ ಎಕ್ಸಿಟ್ ಪೋಲ್ ಭವಿಷ್ಯ ಉಲ್ಟಾ ಹೊಡೆದಿತ್ತು! ಯಾವಾಗ ನೆನಪಿದೆಯೆ?

ಹಣ್ಣು, ತರಕಾರಿಗಳ ಆರೋಗ್ಯಕರ ಸ್ಮೂದಿ ಎಂಬ ಟ್ರೆಂಡ್‌! ಒಳ್ಳೆಯದೇ, ಕೆಟ್ಟದ್ದೇ?

ಸದ್ಯದ ಯುವಜನರ ಆಹಾರದ ಟ್ರೆಂಡ್‌ ಎಂದರೆ ಅದು ಸ್ಮೂದಿ. ಬಹಳ ಸುಲಭವಾಗಿ ಮಾಡಬಲ್ಲ, ಹೊಟ್ಟೆ ತುಂಬಿಸಿಕೊಳ್ಳಬಹುದಾದ ಹಾಗೂ ಆರೋಗ್ಯಕ್ಕೆ ಒಳ್ಳೆಯದು ಎಂದು ಹೇಳಲಾದ ಟ್ರೆಂಡ್‌ ಆದ ಆಹಾರ ಕ್ರಮ. ಒಂದಿಷ್ಟು ಹಣ್ಣುಗಳನ್ನು ಸೇರಿಸಿ ಮಾಡುವ ಸ್ಮೂದಿ, ತರಕಾರಿಗಳನ್ನು ಸೇರಿಸಿ ಮಾಡುವ ಸ್ಮೂದಿ, ಬೀಜಗಳು ಒಣ ಹಣ್ಣುಗಳು, ವೇಗನ್‌ ಹಾಲು ಇತ್ಯಾದಿ ಇತ್ಯಾದಿ ಹಲವು ಬಗೆಯನ್ನು ಸೇರಿಸಿ ಮಾಡಬಹುದಾದ ಸ್ಮೂದಿಗಳು ಬಹುತೇಕರ ಜೀವನದಲ್ಲಿ ಇಂದು ಪ್ರತಿನಿತ್ಯದ ಆಹಾರ. ಹಲವು ಪೋಷಕಾಂಶಗಳನ್ನು ಒಳಗೊಂಡ, ಒಮ್ಮೆಲೇ ದೇಹಕ್ಕೆ ಬೇಕಾದ ಪೋಷಕಾಂಶಗಳನ್ನು ಸುಲಭವಾಗಿ ದೇಹಕ್ಕೆ ಸಿಗುವಂತೆ ಮಾಡಬಲ್ಲ, ಸುಲಭ ಸರಳವಾದ, ಫಟಾಫಟ್‌ ಮಾಡಬಹುದಾದ ಆಯ್ಕೆ ಇದು ಎಂಬುದರಲ್ಲಿ ಯಾವ ಸಂಶಯವೂ ಇಲ್ಲ. ಹಾಗಾದರೆ, ಈ ಸ್ಮೂದಿಗಳನ್ನು ಕುಡಿಯುವುದರಿಂದ, ದೇಹಕ್ಕೆ ಹಣ್ಣು, ತರಕಾರಿ, ಬೀಜಗಳನ್ನು ತಿಂದಷ್ಟೇ ಲಾಭಗಳು ದೊರೆಯುತ್ತವೆಯೇ ಎಂಬ ಬಗ್ಗೆ ನಿಮಗೆ ಪ್ರಶ್ನೆ ಉದ್ಭವಿಸಿದಲ್ಲಿ ಅದಕ್ಕೆ (Fruit and Veggie Smoothies) ಉತ್ತರ ಇಲ್ಲಿದೆ.

  • ನೀವು ಸ್ಮೂದಿಗಾಗಿ ಬಳಸುವ ಹಣ್ಣು ಹಂಪಲಾಗಿರಬಹುದು, ತರಕಾರಿಗಳಿರಬಹುದು, ಬೀಜ ಒಣಹಣ್ಣುಗಳಿರಬಹುದು, ಅವುಗಳನ್ನು ಹಾಗೆಯೇ ಜಗಿದು ತಿಂದರೆ ಆ ಜಗಿಯುವ ಪ್ರಕ್ರಿಯೆಯಲ್ಲಿ ಬಾಯಲ್ಲಿ ಲಾಲಾರಸವೂ ಅಂದರೆ ಜೊಲ್ಲೂ ಕೂಡಾ ಅದಕ್ಕೆ ಸೇರುತ್ತದೆ. ಈ ರಸ ಜೀರ್ಣಕ್ರಿಯೆಗೆ ಸಹಾಯ ಮಾಡುವ ರಸ. ಜೊತೆಗೆ ಇದು ಬಾಯಿಯನ್ನು ತೇವವಾಗಿ ಇಟ್ಟುಕೊಳ್ಳುವ ರಸವಾದ್ದರಿಂದ ಇದು ಬಾಯಿಯ ಮೂಲಕ ದೇಹಕ್ಕೆ ಇನ್‌ಫೆಕ್ಷನ್‌ ಹೋಗದಂತೆಯೂ ರಕ್ಷಿಸುತ್ತದೆ. ಸ್ಮೂದಿ ಮಾಡಿ ಕುಡಿಯುವುದರಿಂದ ದೇಹದ ಈ ನೈಸರ್ಗಿಕ ಕ್ರಿಯೆಯನ್ನೇ ನೀವು ದೂರ ಮಾಡಿ ಸುಲಭವಾಗಿ ಆಹಾರವನ್ನು ಹೊಟ್ಟೆಗೆ ಕಳುಹಿಸುತ್ತಿದ್ದೀರಿ ಎಂದಾಯಿತು. ಬಾಯಿಗೆ ಕೆಲಸವೇ ಇಲ್ಲ. ಜೀರ್ಣಕ್ರಿಗೆ ಸಹಾಯ ಆಡುವ ಅಂಶಗಳೂ ಅಲ್ಲಿ ಸೇರಲಿಲ್ಲ!
  • ಸ್ಮೂದಿಯನ್ನು ಕುಡಿಯುವುದರಿಂದ ಬಾಯಿಗೆ ಕೆಲಸವಿಲ್ಲದೆ ಅದು ನೇರವಾಗಿ ಹೊಟ್ಟೆಗೆ ಇಳಿಯುತ್ತದೆ. ಅಲ್ಲಿ ನಿಮ್ಮ ಜೊಲ್ಲುರಸ ಅಂದರೆ ಲಾಲಾರಸ ಈ ಆಹಾರದ ಜೊತೆಗೆ ಸರಿಯಾಗಿ ಸೇರಲಿಲ್ಲ ಅಂತಾಯಿತು. ಇದರಿಂದಾಗಿ ನಿಮ್ಮ ಜೀರ್ಣಕ್ರಿಯೆಯ ಸಾಮರ್ಥ್ಯ ನಿಧಾನವಾಗಿ ಕುಂಠಿತವಾಗುತ್ತಾ ಬರುತ್ತದೆ. ಕೇವಲ ಜೀರ್ಣಕ್ರಿಯೆಯಷ್ಟೇ ಅಲ್ಲ, ರೋಗನಿರೋಧಕ ಶಕ್ತಿಯೂ ಕುಂಠಿತವಾಗುತ್ತಾ ಬರುತ್ತದೆ. ಇಂತಹ ಬಗೆಯ ಆಹಾರಕ್ಕೇ ದೇಹ ಹೊಂದಿಕೊಂಡು, ಜೀರ್ಣ ಮಾಡುವ ಶಕ್ತಿ ಇಳಿಕೆಯಾಗುತ್ತದೆ.
  • ಸ್ಮೂದಿಯು ದ್ರವರೂಪದಲ್ಲಿರುವುದರಿಂದ ಸಹಜವಾಗಿಯೇ, ಸ್ಮೂದಿಯಲ್ಲಿರುವ ನೈಸರ್ಗಿಕ ಸಕ್ಕರೆ ಬಹುಬೇಗನೆ ರಕ್ತಕ್ಕೆ ಸೇರಿ ರಕ್ತದಲ್ಲಿರುವ ಸಕ್ಕರೆಯ ಪ್ರಮಾಣ ಇದ್ದಕ್ಕಿದ್ದಂತೆ ಏರಿಕೆಯಾಗುತ್ತದೆ. ಇದರಿಂದಾಗಿ ಸುಸ್ತಿನ ಅನುಭವ, ತಲೆಸುತ್ತಿನಂತ ಸಮಸ್ಯೆಗಳೂ ಮುಂದೆ ತಲೆದೋರಬಹುದು. ಹಣ್ಣುಗಳು, ಹಂಪಲುಗಳು ಹಾಗೂ ತರಕಾರಿಗಳಲ್ಲಿರುವ ನಾರಿನಂಶ ಸರಿಯಾಗಿ ಹೊಟ್ಟೆ ಸೇರದೆ, ವ್ಯರ್ಥವಾಗಬಹುದು. ಪೋಷಕಾಂಶವೂ ನಷ್ಟವಾಗಬಹುದು. ಇವೆಲ್ಲವನ್ನೂ ಜಗಿದು ತಿನ್ನುವಾಗ ಸಿಗಬಹುದಾದ ಆರೋಗ್ಯದ ಲಾಭಗಳೆಲ್ಲವೂ ಸ್ಮೂದಿಯ ಮೂಲಕ ಸಿಗದೇ ಹೋಗುವ ಸಾಧ್ಯತೆಗಳೇ ಹೆಚ್ಚು.
  • ಕೆಲವು ಮಂದಿಗೆ ದೇಹದಲ್ಲಿರುವ ಸಕ್ಕರೆಯ ಅಂಶದ ಏರಿಕೆಯಿಂದಾಗಿ ತಕ್ಷಣ ತಲೆಸುತ್ತು, ತಲೆನೋವು ಮತ್ತಿತರ ಸಮಸ್ಯೆಯೂ ಕಾಡಬಹುದು. ಆದರೆ, ಸ್ಮೂದಿಗೆ ಬಳಸಿದ ಹಣ್ಣು ಹಂಪಲು ಅಥವಾ ತರಕಾರಿ, ಒಣ ಹಣ್ಣು ಬೀಜಗಳನ್ನು ಹಾಗೆಯೇ ತಿನ್ನುವುದರಿಂದ ಈ ಪರಿಣಾಮಗಳು ಕಾಣಿಸಿಕೊಳ್ಳಲಾರದು. ಹಾಗಾಗಿ, ಸ್ಮೂದಿಗಿಂತ ಹಾಗೆಯೇ ತಿನ್ನುವುದೇ ಆರೋಗ್ಯಕ್ಕೆ ಹೆಚ್ಚು ಸೂಕ್ತ ಎಂಬುದನ್ನು ನೆನಪಿಡಿ.

ಈ ಸಂಗತಿಯ ಕುರಿತು ನಿಮ್ಮ ಅನಿಸಿಕೆ ಏನು? ಕಾಮೆಂಟ್ ಮೂಲಕ ತಿಳಿಸಿ

Continue Reading

ಮಳೆ

Karnataka Weather : ರಾಜ್ಯದಲ್ಲಿ ತಗ್ಗಿದ ಮಳೆ ಪ್ರಮಾಣ; ಸ್ವಲ್ಪ ಕಡೆ ವರುಣ ಸಾಧಾರಣ, ಗಾಳಿ ರಭಸ ಅಸಾಧಾರಣ

Rain News : ರಾಜ್ಯಾದ್ಯಂತ ಬ್ರೇಕ್‌ ಕೊಟ್ಟಿದ್ದ ವರುಣ ಜೂನ್‌ ಮೊದಲ ವಾರದಿಂದ ಮತ್ತೆ ಅಬ್ಬರಿಸಲಿದ್ದಾನೆ. ಗುಡುಗು ಸಹಿತ ಸಾಧಾರಣ ಮಳೆಯಾಗಲಿದ್ದು, ರಭಸವಾಗಿ ಗಾಳಿ ಬೀಸುವ ಸಾಧ್ಯತೆ ಇದೆ ಎಂದು ಹವಾಮಾನ ಇಲಾಖೆ ಮುನ್ಸೂಚನೆಯನ್ನು (Karnataka Weather Forecast) ನೀಡಿದೆ.

VISTARANEWS.COM


on

By

Karnataka Weather Forecast
Koo

ಬೆಂಗಳೂರು: ರಾಜ್ಯಾದ್ಯಂತ ಮಳೆ (Rain news) ಪ್ರಮಾಣವು ತಗ್ಗಿದೆ. ಕಳೆದ ಎರಡ್ಮೂರು ದಿನದಿಂದ ಮಳೆಯು ಕಣ್ಮರೆಯಾಗಿದೆ. ನಿನ್ನೆ ಗುರುವಾರ ಕರಾವಳಿಯ ಕೆಲವು ಕಡೆಗಳಲ್ಲಿ ಹಾಗೂ ದಕ್ಷಿಣ ಒಳನಾಡಿನ ಹಲವು ಕಡೆಗಳಲ್ಲಿ (Karnataka Weather Forecast) ಮಳೆಯಾಗಿದೆ. ಉಳಿದಂತೆ ಉತ್ತರ ಒಳನಾಡಿನಲ್ಲಿ ಒಣಹವೆ (Dry Weather) ಇತ್ತು.

ಶಿವಮೊಗ್ಗದ ಆಗುಂಬೆಯಲ್ಲಿ 5 ಸೆಂ.ಮೀ, ಕೊಡಗಿನ ಗೋಣಿಕೊಪ್ಪಲು 3 ಸೆಂ.ಮೀ ಮಳೆಯಾಗಿದೆ. ಹಾಗೇ ದಕ್ಷಿಣ ಕನ್ನಡದ ಧರ್ಮಸ್ಥಳ, ಉಡುಪಿಯ ಕೋಟ, ಉತ್ತರ ಕನ್ನಡದ ಮಂಕಿಯಲ್ಲಿ ತಲಾ 1 ಸೆಂ.ಮೀ ಮಳೆಯಾಗಿದೆ. ಇನ್ನೂ ಕಲಬುರಗಿಯಲ್ಲಿ ಗರಿಷ್ಠ ಉಷ್ಣಾಂಶ 41.3 ಡಿ.ಸೆ ದಾಖಲಾಗಿತ್ತು.

ಇದನ್ನೂ ಓದಿ: World No Tobacco Day: ತಂಬಾಕಿನ ಚಟ ಎಷ್ಟೊಂದು ರೋಗಗಗಳಿಗೆ ಕಾರಣ ಆಗುತ್ತದೆ ನೋಡಿ!

ನಾಳೆಯಿಂದ ಮತ್ತೆ ಶುರುವಾಗುತ್ತಾ ಅಬ್ಬರ?

ದಕ್ಷಿಣ ಒಳನಾಡು ಹಾಗೂ ಮಲೆನಾಡಿನ ಭಾಗಗಳಲ್ಲಿ ಮಳೆ ಅಬ್ಬರ ಇರಲಿದೆ. ಬೆಂಗಳೂರು ಗ್ರಾಮಾಂತರ, ಬೆಂಗಳೂರು ನಗರ, ಚಾಮರಾಜನಗರ, ಚಿಕ್ಕಬಳ್ಳಾಪುರ, ಚಿಕ್ಕಮಗಳೂರು, ಕೊಡಗು, ಕೋಲಾರ, ಮೈಸೂರು, ರಾಮನಗರ ಜಿಲ್ಲೆಗಳ ಒಂದೆರಡು ಕಡೆಗಳಲ್ಲಿ ಗುಡುಗು ಸಹಿತ 30-40 ಕಿ.ಮೀ ಗಾಳಿಯೊಂದಿಗೆ ಭಾರಿ ಮಳೆಯಾಗಲಿದೆ.

ಇನ್ನೂ ಕರಾವಳಿಯ ದಕ್ಷಿಣ ಕನ್ನಡ, ಉಡುಪಿ, ಉತ್ತರ ಕನ್ನಡ ಜಿಲ್ಲೆಗಳಲ್ಲಿ ಕೆಲವು ಸ್ಥಳಗಳಲ್ಲಿ ಗುಡುಗು ಸಹಿತ ಗಾಳಿಯೊಂದಿಗೆ ಸಾಧಾರಣ ಮಳೆಯಾಗುವ ಸಾಧ್ಯತೆಯಿದೆ. ಬಳ್ಳಾರಿ, ಚಿತ್ರದುರ್ಗ, ದಾವಣಗೆರೆ, ಹಾಸನ, ಮಂಡ್ಯ, ಶಿವಮೊಗ್ಗ, ತುಮಕೂರು, ವಿಜಯನಗರ ಜಿಲ್ಲೆಗಳಲ್ಲಿ ಹಲವೆಡೆ ಗುಡುಗು ಸಹಿತ ಗಾಳಿಯೊಂದಿಗೆ (30-40 kmph) ಸಾಧಾರಣ ಮಳೆಯಾಗಲಿದೆ.

ಇದನ್ನೂ ಓದಿ: Kukke Subramanya: ಹೊಳೆ ಉಕ್ಕಿ ಹರಿದು ಕೊಚ್ಚಿ ಹೋದ ಪಿಕ್ಅಪ್ ವಾಹನ; ಚಾಲಕನ ರಕ್ಷಣೆ

ಧಾರವಾಡ, ಗದಗ, ಕೊಪ್ಪಳ, ರಾಯಚೂರು, ಯಾದಗಿರಿ ಜಿಲ್ಲೆಗಳ ಒಂದೆರಡು ಕಡೆಗಳಲ್ಲಿ ಗುಡುಗು ಸಹಿತ ಗಾಳಿಯೊಂದಿಗೆ (40-50 kmph) ಸಾಧಾರಣ ಮಳೆಯಾಗಲಿದೆ. ಬಾಗಲಕೋಟೆ, ಬೆಳಗಾವಿ, ಬೀದರ್, ಹಾವೇರಿ, ಕಲಬುಲಗಿ, ವಿಜಯಪುರ ಜಿಲ್ಲೆಗಳ ಒಂದೆರಡು ಕಡೆಗಳಲ್ಲಿಗುಡುಗು ಸಹಿತ ಗಾಳಿಯೊಂದಿಗೆ ಹಗುರ ಮಳೆಯಾಗುವ ಸಾಧ್ಯತೆಯಿದೆ.

ಉತ್ತರ ಒಳನಾಡಿನ 40-50 ಕಿ.ಮೀ ವೇಗದ ಗಾಳಿ ಬೀಸುವ ಸಾಧ್ಯತೆಯಿದೆ. ಮೇಲ್ಮೈ ಮಾರುತಗಳು (30-40 kmph) ಕರಾವಳಿ ಮತ್ತು ದಕ್ಷಿಣ ಒಳನಾಡಿನ ಎಲ್ಲಾ ಜಿಲ್ಲೆಗಳ ಮೇಲೆ ಮೇಲುಗೈ ಸಾಧಿಸುವ ಸಾಧ್ಯತೆಯಿದೆ. ಉಳಿದ ಜಿಲ್ಲೆಗಳಲ್ಲಿ ಒಣ ಹವೆಯಿರುವ ಸಾಧ್ಯತೆಯಿದೆ. ಮುಂದಿನ 24 ಗಂಟೆಯಲ್ಲಿ ಬೆಂಗಳೂರಲ್ಲಿ ಭಾಗಶಃ ಮೋಡ ಕವಿಯಲಿದೆ. ಕೆಲವೊಮ್ಮೆ ಹಗುರ ಮಳೆಯಾಗಲಿದ್ದು, ಮೇಲ್ಮೈ ಗಾಳಿಯು ಪ್ರಬಲವಾಗಿರಲಿದೆ.

ಈ ಸಂಗತಿಯ ಕುರಿತು ನಿಮ್ಮ ಅನಿಸಿಕೆ ಏನು? ಕಾಮೆಂಟ್ ಮೂಲಕ ತಿಳಿಸಿ

Continue Reading

ಮಳೆ

Karnataka Weather : ರಾಜ್ಯದಲ್ಲಿಂದು ಭಾರಿ ಮಳೆಗೆ ಗುಡುಗು, ಮಿಂಚು ಸಾಥ್‌

Rain News : ರಾಜ್ಯಾದ್ಯಂತ ರಭಸವಾಗಿ ಗಾಳಿ ಬೀಸಲಿದ್ದು, ಗುಡುಗು, ಮಿಂಚು ಸಹಿತ ಮಳೆಯಾಗುವ ಸಾಧ್ಯತೆಯಿದೆ ಎಂದು ಹವಾಮಾನ ಇಲಾಖೆ ಮುನ್ಸೂಚನೆಯನ್ನು (Karnataka Weather Forecast) ನೀಡಿದೆ.

VISTARANEWS.COM


on

By

Karnataka Weather
ಸಾಂದರ್ಭಿಕ ಚಿತ್ರ
Koo

ಬೆಂಗಳೂರು: ದಕ್ಷಿಣ ಒಳನಾಡು, ಮಲೆನಾಡು ಮತ್ತು ಕರಾವಳಿ ಜಿಲ್ಲೆಗಳಲ್ಲಿ ಪ್ರತ್ಯೇಕವಾಗಿ ಭಾರಿ ಮಳೆಯಾಗುವ ಸಾಧ್ಯತೆ ಇದೆ. ಉತ್ತರ ಒಳನಾಡಿನ ಜಿಲ್ಲೆಗಳಲ್ಲಿ ಹಗುರದಿಂದ ಕೂಡಿದ ಮಳೆಯಾಗುವ (Rain News) ಸಾಧ್ಯತೆಯಿದೆ. ರಾಜ್ಯದ ಪ್ರತ್ಯೇಕ ಸ್ಥಳಗಳಲ್ಲಿ 30-40 ಕಿ.ಮೀ ವೇಗದಲ್ಲಿ ಗಾಳಿಯೊಂದಿಗೆ ಗುಡುಗು ಸಹಿತ ಮಳೆಯಾಗುವ ಸಾಧ್ಯತೆಯಿದೆ ಎಂದು ಹವಾಮಾನ ಇಲಾಖೆ ಮುನ್ಸೂಚನೆಯನ್ನು (Karnataka Weather Forecast) ನೀಡಿದೆ.

ದಕ್ಷಿಣ ಒಳನಾಡಿನ ತುಮಕೂರು, ರಾಮನಗರ ಮತ್ತು ಚಾಮರಾಜನಗರ ಜಿಲ್ಲೆಗಳಲ್ಲಿ ಚದುರಿದಂತೆ ಹಗುರದಿಂದ ಸಾಧಾರಣ ಮಳೆಯಾಗುವ ಸಾಧ್ಯತೆ ಇದೆ. ಉಳಿದಂತೆ ಮಂಡ್ಯ, ಮೈಸೂರು, ಬೆಂಗಳೂರು ನಗರ ಮತ್ತು ಬೆಂಗಳೂರು ಗ್ರಾಮಾಂತರದಲ್ಲಿ ಸಾಧಾರಣ ಮಳೆಯಾಗಲಿದೆ. ಉಳಿದೆಡೆ ಬಹುಶಃ ಒಣಹವೆ ಇರಲಿದೆ.

ಉತ್ತರಒಳನಾಡಿನ ಬೆಳಗಾವಿ, ಹಾವೇರಿ ಮತ್ತು ವಿಜಯನಗರ ಜಿಲ್ಲೆಗಳಲ್ಲಿ ಪ್ರತ್ಯೇಕವಾಗಿ ಹಗುರದಿಂದ ಕೂಡಿದ ಮಳೆಯಾಗಲಿದ್ದು, ಉಳಿದ ಭಾಗಗಳಲ್ಲಿ ಒಣ ಹವೆ ಮೇಲುಗೈ ಸಾಧಿಸುವ ನಿರೀಕ್ಷೆಯಿದೆ.

ಮಲೆನಾಡಿನ ಹಾಸನ ಮತ್ತು ಕೊಡಗು ಜಿಲ್ಲೆಗಳಲ್ಲಿ ಸಾಧಾರಣ ಮಳೆಯಾದರೆ, ಚಿಕ್ಕಮಗಳೂರು ಮತ್ತು ಶಿವಮೊಗ್ಗದಲ್ಲಿ ಮಧ್ಯಮ ಮಳೆಯಾಗುವ ಸಾಧ್ಯತೆಯಿದೆ. ಇನ್ನೂ ಕರಾವಳಿಯ ದಕ್ಷಿಣ ಕನ್ನಡ ಮತ್ತು ಉಡುಪಿ ಜಿಲ್ಲೆಗಳಲ್ಲಿ ವ್ಯಾಪಕವಾಗಿ ಹಗುರ ಮಳೆಯಾಗಲಿದೆ. ಉತ್ತರ ಕನ್ನಡ ಜಿಲ್ಲೆಯಲ್ಲಿ ಮಧ್ಯಮ ಮಳೆಯಾಗುವ ನಿರೀಕ್ಷೆ ಇದೆ.

ಬೆಂಗಳೂರು ವ್ಯಾಪ್ತಿಯಲ್ಲಿ ಗುಡುಗು ಸಹಿತ ಮಳೆಯಾಗುವ ಸಾಧ್ಯತೆ ಇದೆ. ಗರಿಷ್ಠ ಉಷ್ಣಾಂಶ 32 ಡಿಗ್ರಿ ಸೆಲ್ಸಿಯಸ್, ಕನಿಷ್ಠ ಉಷ್ಣಾಂಶ 22 ಡಿಗ್ರಿ ಸೆಲ್ಸಿಯಸ್ ಇರಲಿದೆ ಎಂದು ಹವಾಮಾನ ಇಲಾಖೆ ಮುನ್ಸೂಚನೆಯನ್ನು ನೀಡಿದೆ.

ಇದನ್ನೂ ಓದಿ: BMTC Driver : ಬಿಎಂಟಿಸಿ ಎಲೆಕ್ಟ್ರಿಕಲ್‌ ಬಸ್‌ಗೆ ಪರಭಾಷಿಕರ ನೇಮಕ; ಡಿಸಿ ಕಚೇರಿಗೆ ನುಗ್ಗಿ ಕನ್ನಡಿಗರ ಆಕ್ರೋಶ

ಮಳೆ ಬರುವ ಮುನ್ನ ಈ ವನ್ಯಜೀವಿಧಾಮಗಳನ್ನು ನೋಡಲು ಪ್ರಯತ್ನಿಸಿ

ಮಳೆಗಾಲ ಮತ್ತು ಕಾಡು! ಪ್ರಕೃತಿ ಪ್ರಿಯರ ಅತ್ಯಂತ ಇಷ್ಟದ ಕಾಂಬಿನೇಷನ್‌ ಇದು. ಮಳೆಗಾಲದಲ್ಲೊಮ್ಮೆ ಕಾಡಿಗೆ ಕರೆದರೆ ಯಾವ ಪ್ರಕೃತಿಪ್ರೇಮಿ ಬೇಡ ಅನ್ನಲಾರ ಹೇಳಿ? ವನ್ಯಜೀವಿ ಪ್ರಿಯರ, ಪ್ರಕೃತಿಪ್ರಿಯರ ಈ ಆಸೆಗೆ ತಣ್ಣೀರೆರಚುವಂತೆ ಮಳೆಗಾಲ ಬಂದ ತಕ್ಷಣ ರಾಷ್ಟ್ರೀಯ ಉದ್ಯಾನ/ವನ್ಯಜೀವಿಧಾಮಗಳೆಲ್ಲ ಬಾಗಿಲು ಮುಚ್ಚುತ್ತವೆ. ಕಾಡಿನ ಮದ್ಯದಲ್ಲಿ ಸಫಾರಿ ಹೋಗಲು, ವನ್ಯಜೀವಿಗಳ ಬೆನ್ನು ಹತ್ತಲು ಯಾರಿಗೂ ಆಸ್ಪದವಿಲ್ಲ. ಆದರೂ, ಪ್ರಕೃತಿ ಪ್ರಿಯರೆಲ್ಲ ಇಂತಹ ರಾಷ್ಟ್ರೀಯ ಉದ್ಯಾನ/ ವನ್ಯಜೀವಿಧಾಮಗಳು ಮುಚ್ಚಿಕೊಳ್ಳುವ ಕೆಲವೇ ದಿನಗಳ ಮುಂಚಿತವಾಗಿ ಅಲ್ಲಿಗೆ ಭೇಟಿ ಕೊಡಬೇಕು. ಮಳೆಗಾಲ ಈಗಷ್ಟೇ ಶುರುವಾದ ವನ್ಯಜೀವಿಧಾಮದಲ್ಲಿ ತಿರುಗಾಡಿ ಬರುವುದೇ ಹಬ್ಬ. ಒಂದೆರಡು ಮಳೆ ಸುರಿದು ಕಾಡೆಲ್ಲ ಕಳೆಕಳೆಯಾಗಿ ಹಸಿರಾಗಿ ಚಿಗಿತುಕೊಂಡು ಅದ್ಭುತ ದೃಶ್ಯಗಳನ್ನು ನಿಮಗೆ ನೀಡುವ ಜೊತೆಗೆ ರೋಮಾಂಚಕ ಅನುಭವಗಳನ್ನು ನೀಡುತ್ತವೆ. ಬನ್ನಿ, ಯಾವೆಲ್ಲ ರಾಷ್ಟ್ರೀಯ ಉದ್ಯಾನಗಳನ್ನು ಮಳೆಗಾಲಕ್ಕೆ ಸ್ವಲ್ಪವೇ ಮುನ್ನ ನೀವು ನೋಡುವುದೇ ಒಂದು ಅನುಭವ (wildlife sanctuaries) ಎಂಬುದನ್ನು ತಿಳಿಯೋಣ ಬನ್ನಿ.

Jim Corbett National Park, Uttarakhand

ಜಿಮ್‌ ಕಾರ್ಬೆಟ್‌ ರಾಷ್ಟ್ರೀಯ ಉದ್ಯಾನ, ಉತ್ತರಾಖಂಡ

ಉತ್ತರಾಖಂಡದ ಬಹು ಪ್ರಸಿದ್ಧ ರಾಷ್ಟ್ರೀಯ ಉದ್ಯಾನ ಭಾರತದ ಅತ್ಯಂತ ಹಳೆಯ ವನ್ಯಜೀವಿಧಾಮಗಳಲ್ಲಿ ಒಂದು. ಹುಲಿಗಳನ್ನು ಕಾಣಲು ಇದು ಪ್ರಶಸ್ತ ಜಾಗ. ಜೂನ್‌ ಮದ್ಯದಲ್ಲಿ ಇದು ಮುಚ್ಚಿದರೆ ಮತ್ತೆ ತೆರೆಯುವುದು ಅಕ್ಟೋಬರ್‌ನಲ್ಲಿಯೇ. ಆದರೆ, ಜೂನ್‌ ಆರಂಭದಲ್ಲಿ ಈ ಕಾಡು ನೋಡುವುದು ಬಲು ಸೊಗಸು.

Ranthambore National Park, Rajasthan

ರಣಥಂಬೋರ್‌ ರಾಷ್ಟ್ರೀಯ ಉದ್ಯಾನ, ರಾಜಸ್ಥಾನ

ಭಾರತದ ದೊಡ್ಡ ರಾಷ್ಟ್ರೀಯ ಉದ್ಯಾನಗಳ ಪೈಕಿ ಇದೂ ಒಂದು. ಹುಲಿಗಳನ್ನು ನೋಡಬೇಕೆಂದು ಬಯಸುವ ಪ್ರತಿ ವನ್ಯಜೀವಿ ಪ್ರೇಮಿ ಹಾಗೂ ವನ್ಯಜೀವಿ ಛಾಯಾಗ್ರಾಹಕರು ಈ ರಾಷ್ಟ್ರೀಯ ಉದ್ಯಾನಕ್ಕೆ ಬೇಟಿ ಕೊಡಲು ಬಯಸುವುದು ಸಾಮಾನ್ಯ. ಇದು ಜೂನ್‌ 30ರ ವೇಳೆಗೆ ಮುಚ್ಚುವ ಕಾರಣ ಅದಕ್ಕೂ ಮೊದಲು ಬೇಟಿ ಕೊಟ್ಟರೆ ಅಪರೂಪದ ಅನುಭವಗಳು ನಿಮ್ಮದಾಗಬಹುದು.

Bandhavgarh National Park, Madhya Pradesh

ಬಾಂಧವಗಢ ರಾಷ್ಟ್ರೀಯ ಉದ್ಯಾನ, ಮಧ್ಯಪ್ರದೇಶ

ಹುಲಿಯನ್ನು ನೋಡಲು ಬಯಸುವ ಪ್ರತಿಯೊಬ್ಬ ವನ್ಯಜೀವಿ ಪ್ರಿಯರಿಗೂ ತಿಳಿದ ವನ್ಯಜೀವಿಧಾಮ ಇದು. ಇಲ್ಲಿ ಹುಲಿ ದರ್ಶನದ ಸಾಧ್ಯತೆ ಹೆಚ್ಚು. ಈಗಷ್ಟೇ ಮಳೆಬಿದ್ದ ಕಾಡು ಹಸಿರಾಗಿ ಕಂಗೊಳಿಸುವ ಸಂದರ್ಭ ಮಧ್ಯದಲ್ಲಿ ಆಕಳಿಸುತ್ತಾ ಕುಳಿತ ಹುಲಿಯನ್ನೊಮ್ಮೆ ಕಲ್ಪಿಸಿ ನೋಡಿ. ರೋಮಾಂಚಿತಗೊಳ್ಳುವುದಿಲ್ಲವೇ ಹೇಳಿ! ಜುಲೈನಿಂದ ಅಕ್ಟೋಬರ್‌ವರೆಗೆ ಈದು ಮುಚ್ಚಿರುವ ಕಾರಣ ಜೂನ್‌ನಲ್ಲಿ ಭೇಟಿಕೊಡಲು ಸುಸಮಯ.

Kanha National Park, Madhya Pradesh

ಕನ್ಹಾ ರಾಷ್ಟ್ರೀಯ ಉದ್ಯಾನ, ಮಧ್ಯಪ್ರದೇಶ

ಇದೂ ಕೂಡಾ ಹುಲಿಗಳಿಗೆ ಬಲುಪ್ರಸಿದ್ಧವಾದ ರಾಷ್ಟ್ರೀಯ ಉದ್ಯಾನ. ಮಳೆಗಾಲ ಆರಂಭವಾದ ತಕ್ಷಣ ಕಾಣಲು ಇದು ಬಲು ಚಂದ. ಜೂನ್‌ 30ರಿಂದ ಅಕ್ಟೋಬರ್‌ 15ರವರೆಗೆ ಇದು ಮುಚ್ಚಿರುತ್ತದೆ.

Pench National Park, Madhya Pradesh and Maharashtra

ಪೆಂಚ್‌ ರಾಷ್ಟ್ರೀಯ ಉದ್ಯಾನ, ಮಧ್ಯಪ್ರದೇಶ ಮತ್ತು ಮಹಾರಾಷ್ಟ್ರ

ಮಧ್ಯಪ್ರದೇಶ ಹಾಗೂ ಮಹಾರಾಷ್ಟ್ರದ ಗಡಿಯಲ್ಲಿರುವ ಈ ರಾಷ್ಟ್ರೀಯ ಉದ್ಯಾನ ಅತ್ಯಂತ ಸುಂದರವಾದ ಕಾಡುಗಳಲ್ಲಿ ಒಂದು. ರುಡ್ಯಾರ್ಡ್‌ ಕಿಪ್ಲಿಂಗ್‌ ಅವರ ದಿ ಜಂಗಲ್‌ ಬುಕ್‌ ಇದೇ ಕಾಡಿನಿಂದ ಸ್ಪೂರ್ತಿಗೊಂಡು ರಚಿತವಾದ ಕತೆ. ಹೆಚ್ಚು ಹುಲಿಗಳಿರುವ ಈ ಕಾಡು ಜೂನ್‌ 16ರಿಂದ ಸೆಪ್ಟೆಂಬರ್‌ವರೆಗೆ ಪ್ರವಾಸಿಗರಿಗೆ ಮುಚ್ಚಿರುತ್ತದೆ.

Nagarhole National Park, Karnataka

ನಾಗರಹೊಳೆ ರಾಷ್ಟ್ರೀಯ ಉದ್ಯಾನ, ಕರ್ನಾಟಕ

ನಮ್ಮ ಕರ್ನಾಟಕದ ನಾಗರಹೊಳೆ ರಾಷ್ಟ್ರೀಯ ಉದ್ಯಾನ ಭಾರತದ ಅತ್ಯಂತ ಸುಂದರವಾದ ವನ್ಯಜೀವಿಧಾಮಗಳಲ್ಲಿ ಒಂದು. ಹುಲಿಗಳ ಜೊತೆಗೆ ಆನೆ, ಚಿರತೆ, ಜಿಂಕೆ, ಕಾಡಮ್ಮೆಗಳೂ ಸೇರಿದಂತೆ ಅನೇಕ ಪ್ರಾಣಿಗಳ ಸಂತಿತಿ ಇಲ್ಲಿ ವಿಪುಲವಾಗಿದೆ. ಮಳೆ ಈಗಷ್ಟೇ ಬರಲು ಆರಂಭವಾಗುವ ಸಂದರ್ಭ ಇದು ರಮ್ಯವಾಗಿ ಕಾಣುತ್ತದೆ. ಜೂನ್‌ನಿಂದ ಸೆಪ್ಟೆಂಬರ್‌ವರೆಗೆ ಇದು ಮುಚ್ಚಿರುತ್ತದೆ. ಅಕ್ಟೋಬರ್‌ ತಿಂಗಳಲ್ಲೂ ಇದು ಅದ್ಭುತವಾಗಿ ಕಾಣುತ್ತದೆ.

ಈ ಸಂಗತಿಯ ಕುರಿತು ನಿಮ್ಮ ಅನಿಸಿಕೆ ಏನು? ಕಾಮೆಂಟ್ ಮೂಲಕ ತಿಳಿಸಿ

Continue Reading
Advertisement
Stray dogs attack in Shira 4 children one woman injured
ಪ್ರಮುಖ ಸುದ್ದಿ4 hours ago

Stray Dogs Attack: ಶಿರಾದಲ್ಲಿ ಬೀದಿ ನಾಯಿಗಳ ದಾಳಿ: 4 ಮಕ್ಕಳು, ಒಬ್ಬ ಮಹಿಳೆಗೆ ಗಂಭೀರ ಗಾಯ

Somnath Bharti
ದೇಶ4 hours ago

Somnath Bharti: ಮೋದಿ 3ನೇ ಸಲ ಪ್ರಧಾನಿಯಾದರೆ ತಲೆ ಬೋಳಿಸಿಕೊಳ್ಳುವೆ ಎಂದ ಆಪ್‌ ನಾಯಕ!

T 20 world cup
ಕ್ರೀಡೆ5 hours ago

T20 World Cup : ಪಂದ್ಯದಲ್ಲಿ ಬಾಂಗ್ಲಾದೇಶ ವಿರುದ್ಧ 60 ರನ್​ ಭರ್ಜರಿ ವಿಜಯ ಸಾಧಿಸಿದ ಭಾರತ

Exit Poll
ಪ್ರಮುಖ ಸುದ್ದಿ5 hours ago

Exit Poll 2024 : ಆ್ಯಕ್ಸಿಸ್​ ಮೈ ಇಂಡಿಯಾ ಪ್ರಕಾರ ಎನ್​ಡಿಎಗೆ 401 ಸೀಟು

Poll Of Polls
ದೇಶ5 hours ago

Poll Of Polls: ಎನ್‌ಡಿಎಗೆ 350+ ಸೀಟು, ದಕ್ಷಿಣದಲ್ಲೂ ಬಿಜೆಪಿಗೆ ಸ್ವೀಟು, ಇಂಡಿಯಾ ‌ಕೂಟಕ್ಕೆ ಹಿನ್ನಡೆಯ ಏಟು!

Exit Poll 2024
ಪ್ರಮುಖ ಸುದ್ದಿ6 hours ago

Exit Poll 2024 : ಟಿಎಂಸಿಯ ಭದ್ರಕೋಟೆಗೆ ಕಮಲ ಪಕ್ಷದ ಲಗ್ಗೆ; ಮಮತಾ ಬ್ಯಾನರ್ಜಿಗೆ ಮುಖಭಂಗ?

Bangalore rain
ಪ್ರಮುಖ ಸುದ್ದಿ7 hours ago

Bangalore Rain: ರಾಜಧಾನಿಯಲ್ಲಿ ಮಳೆ ಆರ್ಭಟ; ಬೆಂಗಳೂರು-ಹೊಸೂರು ಹೆದ್ದಾರಿ ಜಲಾವೃತ, ಮನೆಗಳಿಗೆ ನುಗ್ಗಿದ ನೀರು

Dinesh Karthik
ಪ್ರಮುಖ ಸುದ್ದಿ7 hours ago

Dinesh Karthik: ಜನ್ಮದಿನದಂದೇ ಕ್ರಿಕೆಟ್‌ ಬದುಕಿಗೆ ದಿನೇಶ್‌ ಕಾರ್ತಿಕ್‌ ಭಾವುಕ ವಿದಾಯ; ಕೊಡುಗೆ ನೆನೆದ ಆರ್‌ಸಿಬಿ ಫ್ಯಾನ್ಸ್

Exit Poll
ಪ್ರಮುಖ ಸುದ್ದಿ7 hours ago

Exit Poll 2024 : ಭರ್ಜರಿ ಗೆಲುವಿನ ಮುನ್ಸೂಚನೆ ಸಿಕ್ಕಿದ ತಕ್ಷಣ ಮತದಾರರಿಗೆ ಧನ್ಯವಾದ ತಿಳಿಸಿದ ಮೋದಿ

Exit Poll 2024
ದೇಶ8 hours ago

Exit Poll 2024 : ಮತಗಟ್ಟೆ ಸಮೀಕ್ಷೆಗಳನ್ನು ನಾವು ನಂಬಲ್ಲ; ಡಿಕೆಶಿ, ಎಂಬಿ ಪಾಟೀಲ್ ಸ್ಪಷ್ಟ ನುಡಿ

Sharmitha Gowda in bikini
ಕಿರುತೆರೆ8 months ago

Geetha Serial Kannada: ನಿದ್ದೆ ಕದ್ದ ಚೋರಿ! ನಟಿ `ಭಾನುಮತಿ’ ಹಾಟ್‌ ಪೋಟೊಗಳಿಗೆ ಫ್ಯಾನ್ಸ್ ಫುಲ್ ಫಿದಾ

Kannada Serials
ಕಿರುತೆರೆ8 months ago

Kannada Serials TRP: 2ನೇ ಸ್ಥಾನದಲ್ಲಿ 2 ಧಾರಾವಾಹಿಗಳು; ಟಿಆರ್‌ಪಿ ರೇಸ್‌ನಲ್ಲಿಲ್ಲ ಭಾಗ್ಯಲಕ್ಷ್ಮೀ!

Bigg Boss- Saregamapa 20 average TRP
ಕಿರುತೆರೆ8 months ago

Kannada Serials TRP: ಏಳನೇ ಸ್ಥಾನಕ್ಕೆ ʻಅಮೃತಧಾರೆʼ ಕುಸಿತ; ಬಿಗ್‌ ಬಾಸ್‌-ಸರಿಗಮಪ ಟಿಆರ್‌ಪಿ ಎಷ್ಟು?

galipata neetu
ಕಿರುತೆರೆ6 months ago

Kanyadana Serial: ಕಿರುತೆರೆಗೆ ಮತ್ತೆ ಎಂಟ್ರಿ ಕೊಟ್ಟ ʻಗಾಳಿಪಟʼ ಖ್ಯಾತಿಯ ʻನೀತುʼ!

Kannada Serials
ಕಿರುತೆರೆ8 months ago

Kannada Serials TRP: ನಾಲ್ಕನೇ ಸ್ಥಾನಕ್ಕೆ ಕುಸಿತ ಕಂಡ ʻಸೀತಾ ರಾಮʼ; ಟಿಆರ್‌ಪಿ ರೇಸ್‌ಗೆ ʻಭಾಗ್ಯಲಕ್ಷ್ಮಿʼ ಬ್ಯಾಕ್‌!

Kannada Serials
ಕಿರುತೆರೆ8 months ago

Kannada Serials TRP: ಟಿಆರ್‌ಪಿಯಲ್ಲಿ ʻಭಾಗ್ಯಲಕ್ಷ್ಮೀʼ ಹವಾ; ʻಪುಟ್ಟಕ್ಕನ ಮಕ್ಕಳುʼ ಧಾರಾವಾಹಿಗೆ ಸಂಕಷ್ಟ!

Bigg Boss' dominates TRP; Sita Rama fell to the sixth position
ಕಿರುತೆರೆ7 months ago

Kannada Serials TRP: ಟಿಆರ್‌ಪಿಯಲ್ಲಿ ʻಬಿಗ್ ಬಾಸ್ʼದೇ ಮೇಲುಗೈ; 6ನೇ ಸ್ಥಾನಕ್ಕೆ ಕುಸಿದ ʻಸೀತಾ ರಾಮʼ

geetha serial Dhanush gowda engagement
ಕಿರುತೆರೆ6 months ago

Dhanush Gowda: ಗೀತಾ ಧಾರಾವಾಹಿ ನಟನ ನಿಶ್ಚಿತಾರ್ಥ; ಭವ್ಯಾಳ ಕಮೆಂಟ್‌ ಬಾಕ್ಸ್‌ ಆಫ್‌!

varun
ಕಿರುತೆರೆ7 months ago

Brindavana Serial: ʼಬೃಂದಾವನʼ ಧಾರಾವಾಹಿಯಲ್ಲಿ ದೊಡ್ಡ ಟ್ವಿಸ್ಟ್‌; ಪ್ರಮುಖ ಪಾತ್ರಧಾರಿಯೇ ಬದಲು

Kannada Serials
ಕಿರುತೆರೆ9 months ago

Kannada Serials TRP: ಟಿಆರ್‌ಪಿಯಲ್ಲಿ ಏರಿಕೆ ಕಂಡ ʻಅಮೃತಧಾರೆʼ; ʻಗಟ್ಟಿಮೇಳʼಕ್ಕೆ ನಾಲ್ಕನೇ ಸ್ಥಾನ!

Liquor ban
ಬೆಂಗಳೂರು12 hours ago

Liquor Ban : ಮುಂದಿನ ಏಳು ದಿನಗಳಲ್ಲಿ ನಾಲ್ಕೂವರೆ ದಿನ ಬಾರ್ ಕ್ಲೋಸ್; ಎಣ್ಣೆ ಸಿಗೋದು ಯಾವ ದಿನ?

Assault Case in Shivamogga
ಕ್ರೈಂ3 days ago

Assault Case : ಶಿವಮೊಗ್ಗದಲ್ಲಿ ಮತ್ತೆ ಬಾಲ ಬಿಚ್ಚಿದ ಪುಂಡರು; ಗಾಂಜಾ ನಶೆಯಲ್ಲಿ ವಾಹನಗಳು ಪೀಸ್‌ ಪೀಸ್‌

Karnataka weather Forecast
ಮಳೆ4 days ago

Karnataka Weather : ಚಿಕ್ಕಮಗಳೂರಲ್ಲಿ ಭಾರಿ ಮಳೆ; ಯಾದಗಿರಿಯಲ್ಲಿ ಕರೆಂಟ್‌ ಕಟ್‌, ಜನರೇಟರ್‌ನಿಂದ ಮೊಬೈಲ್‌ಗಳಿಗೆ ಚಾರ್ಜಿಂಗ್‌!

tumkur murder
ತುಮಕೂರು5 days ago

Tumkur Murder : ಮಗುವಿನ ಮುಂದೆಯೇ ಹೆಂಡತಿಯ ಕತ್ತು, ದೇಹವನ್ನು ಕತ್ತರಿಸಿ ಬಿಸಾಡಿದ ದುಷ್ಟ

Karnataka Weather Forecast
ಮಳೆ5 days ago

Karnataka Weather : ಕಡಲತೀರದಲ್ಲಿ ಅಲೆಗಳ ಅಬ್ಬರ, ಪ್ರವಾಸಿಗರಿಗೆ ಕಟ್ಟೆಚ್ಚರ; ನಾಳೆಯೂ ಗಾಳಿ ಸಹಿತ ಮಳೆ ಅಬ್ಬರ

Karnataka Rain
ಮಳೆ6 days ago

Karnataka Rain : ಯಾದಗಿರಿಯಲ್ಲಿ ಬಿರುಗಾಳಿ ಸಹಿತ ಮಳೆ; ಸಿಡಿಲು ಬಡಿದು ಎಮ್ಮೆಗಳು ಸಾವು

Basavanagudi News
ಬೆಂಗಳೂರು6 days ago

Basavanagudi News : ಪೂಜಾ ಸಾಮಗ್ರಿಗೆ ಒನ್‌ ಟು ಡಬಲ್‌ ರೇಟ್‌; ದೊಡ್ಡ ಗಣಪತಿ ದೇಗುಲದಲ್ಲಿ ಕೈ ಕೈ ಮಿಲಾಯಿಸಿದ ಭಕ್ತರು-ವ್ಯಾಪಾರಿಗಳು

Karnataka Rain
ಮಳೆ1 week ago

Karnataka Rain : ಭಾರಿ ಮಳೆಗೆ ರಸ್ತೆ ಕಾಣದೆ ರಾಜಕಾಲುವೆಗೆ ಉರುಳಿದ ಆಟೋ; ಚಾಲಕ ಸ್ಥಳದಲ್ಲೇ ಸಾವು

dina bhavishya read your daily horoscope predictions for May 23 2024
ಭವಿಷ್ಯ1 week ago

Dina Bhavishya : 12 ರಾಶಿಯವರ ಇಂದಿನ ಭವಿಷ್ಯ ಹೇಗಿದೆ? ಯಾರಿಗೆ ಶುಭ, ಯಾರಿಗೆ ಅಶುಭ ಫಲ?

Karnataka Weather Forecast
ಮಳೆ2 weeks ago

Karnataka Weather : ಮುಂದುವರಿಯಲಿದೆ ವರುಣಾರ್ಭಟ; ಬೆಂಗಳೂರಲ್ಲೂ ಭಾರಿ ಮಳೆ ನಿರೀಕ್ಷೆ!

ಟ್ರೆಂಡಿಂಗ್‌