Ranganayaka Movie: ʻಡ್ರೋನ್‌ʼ ಕಥೆ ಬೇಡ ಎಂದ ಮಂಜ; ವಿಕ್ಕಿ-ಜಗ್ಗೇಶ್‌ ಕಾಮಿಡಿಗೆ ನಕ್ಕ ಫ್ಯಾನ್ಸ್‌! - Vistara News

ಸ್ಯಾಂಡಲ್ ವುಡ್

Ranganayaka Movie: ʻಡ್ರೋನ್‌ʼ ಕಥೆ ಬೇಡ ಎಂದ ಮಂಜ; ವಿಕ್ಕಿ-ಜಗ್ಗೇಶ್‌ ಕಾಮಿಡಿಗೆ ನಕ್ಕ ಫ್ಯಾನ್ಸ್‌!

Ranganayaka Movie: `ಮಠ’, ‘ಎದ್ದೇಳು ಮಂಜುನಾಥ’ ಬಳಿಕ ಜಗ್ಗಣ್ಣ- ಗುರುಪ್ರಸಾದ್ ಜೋಡಿಯ 3ನೇ ಸಿನಿಮಾ ಇದು. ಸಿನಿಮಾ ಪ್ರಚಾರಕ್ಕಾಗಿ ವಿಕಾಸ್ ವಿಕ್ಕಿಪಿಡಿಯ ಜತೆಯಾಗಿದ್ದಾರೆ. ಮಂಜ ಮತ್ತು ಮಾಣಿ ಎನ್ನುವ ಸಣ್ಣ ಸ್ಕಿಟ್ ಇದೀಗ ವೈರಲ್‌ ಆಗಿದೆ.

VISTARANEWS.COM


on

vicky pedia vikas jaggeshs ranganayaka promotional video Manja Maani
ಮಹತ್ವದ, ಕುತೂಹಲಕರ ಸುದ್ದಿಗಾಗಿ ಫಾಲೊ ಮಾಡಿ
Koo

ಬೆಂಗಳೂರು: ಗುರುಪ್ರಸಾದ್ ಹಾಗೂ ನವರಸ ನಾಯಕ ಜಗ್ಗೇಶ್ ಜೋಡಿಯ ‘ರಂಗ ನಾಯಕ’ ಸಿನಿಮಾ (Ranganayaka Movie) (Ranganayaka Song) ಇದೇ ಮಾರ್ಚ್‌ 8ಕ್ಕೆ ತೆರೆಗೆ ಬರುತ್ತಿದೆ. ಸಿನಿಮಾದ ಪ್ರಚಾರ ಕಾರ್ಯಗಳು ಭರದಿಂದ ಸಾಗಿದೆ. `ಮಠ’, ‘ಎದ್ದೇಳು ಮಂಜುನಾಥ’ ಬಳಿಕ ಜಗ್ಗಣ್ಣ- ಗುರುಪ್ರಸಾದ್ ಜೋಡಿಯ 3ನೇ ಸಿನಿಮಾ ಇದು. ಸಿನಿಮಾ ಪ್ರಚಾರಕ್ಕಾಗಿ ವಿಕಾಸ್ ವಿಕ್ಕಿಪಿಡಿಯ ಜತೆಯಾಗಿದ್ದಾರೆ. ಮಂಜ ಮತ್ತು ಮಾಣಿ ಎನ್ನುವ ಸಣ್ಣ ಸ್ಕಿಟ್ ಇದೀಗ ವೈರಲ್‌ ಆಗಿದೆ.

ಗುರುಪ್ರಸಾದ್ ನಿರ್ದೇಶನದಲ್ಲಿ ಬಂದಿದ್ದ ‘ಎದ್ದೇಳು ಮಂಜುನಾಥ’ ಚಿತ್ರದಲ್ಲಿ ಮಂಜ ಆಗಿ ಜಗ್ಗೇಶ್ ಹಾಗೂ ವಿಶೇಷ ಚೇತನ ನಾಣಿ ಪಾತ್ರದಲ್ಲಿ ತಬಲ ನಾಣಿ ಕಾಂಬಿನೇಷನ್‌ ಮೂಡಿಬಂದಿತ್ತು. ಇದೀಗ ನಾಣಿ ಅವರ ವೇಷದಲ್ಲಿ ವಿಕಾಸ್ ಕಾಣಿಸಿಕೊಂಡಿದ್ದಾರೆ. ನಾಣಿಯ ಮಗ ʻಮಾಣಿʼಯಾಗಿ ವಿಕಾಸ್‌ ಬಂದು ಮಂಜ ಬಳಿ ಕಥೆ ಹೇಳಲು ಬರುತ್ತಾರೆ.

1911ರಲ್ಲಿ ನಡೆಯುವ ಕಥೆಯನ್ನು ಹೇಳುತ್ತಾರೆ. ಜಗ್ಗೇಶ್‌ ಅವರು ಈ ಸಿನಿಮಾ ಕಥೆ ಕೇಳಿ ಇಂಪ್ರೆಸ್‌ ಆಗುತ್ತಾರೆ. ಹಾಲಿವುಡ್‌ ರೇಂಜ್‌ಗಿದೆ ಎಂದು ಹೇಳುತ್ತಾರೆ. ‘ಡ್ರೋನ್’ ಕಥೆ ಇದೆ ಹೇಳ್ಲಾ? ಎಂದಾಗ ಬೇಡ ಎಂದು ಮಾಣಿನ ಕಳುಹಿಸಿಕೊಟ್ಟುಬಿಡುತ್ತಾರೆ ಜಗ್ಗೇಶ್‌. ಅಲ್ಲಿಂದ ಹೊರಡುವಾಗ ‘ಎದ್ದೇಳು ಮಂಜುನಾಥ’ ಚಿತ್ರದ ಡೈಲಾಗ್ ಹೊಡೆದು ಮಾಣಿ ಹೋಗುತ್ತಾನೆ.

ಇದನ್ನೂ ಓದಿ: Narendra Modi: ಕಾಜಿರಂಗ ಅಭಯಾರಣ್ಯದಲ್ಲಿ ರಾತ್ರಿ ಕಳೆಯಲಿರುವ ಮೋದಿ; ಇದರಲ್ಲೂ ಇದೆ ಒಂದು ದಾಖಲೆ!

ವೈರಲ್‌ ವಿಡಿಯೊ

ಮಾಣಿ ಹೋದ ನಂತರ ತಕ್ಷಣ ಜಗ್ಗೇಶ್‌ ಅವರು ಗುರುಪ್ರಸಾದ್‌ ಅವರಿಗೆ ಕಾಲ್‌ ಮಾಡಿ, 1911ರ ಕಥೆಯನ್ನು ಹೇಳಲು ಹೊರಡುತ್ತಾರೆ. ಮಾಣಿ ಕೇಳಿಸಿಕೊಂಡು ಒಳಗೆ ಬರುತ್ತಾನೆ. ಕೂಡಲೇ ಮಂಜ ಶಾಕ್ ಆಗಿ ಸುಮ್ಮನಾಗುತ್ತಾನೆ. ಹೀಗೆ ತಮಾಷೆಯಾಗಿ ‘ರಂಗನಾಯಕ’ ಸಿನಿಮಾ ಪ್ರಚಾರ ವಿಡಿಯೊ ವೈರಲ್‌ ಆಗಿದೆ.

ಈಗಾಗಲೇ ಜೀ ಸ್ಟುಡಿಯೋಸ್‌ ವಿತರಣಾ ಹಕ್ಕುಗಳನ್ನು ಪಡೆದುಕೊಂಡಿದೆ. ವಿಖ್ಯಾತ್‌ ಚಿತ್ರ ಪ್ರೊಡಕ್ಷನ್‌ ಬ್ಯಾನರ್‌ನಲ್ಲಿ ಎ.ಆರ್‌.ವಿಖ್ಯಾತ್‌ ಸಿನಿಮಾ ನಿರ್ಮಾಣ ಮಾಡುತ್ತಿದ್ದಾರೆ.

ಕ್ಷಣ ಕ್ಷಣದ ಮಾಹಿತಿಗಾಗಿ Vistara News FaceBook ಪೇಜ್ ಫಾಲೋ ಮಾಡಿ
ಮಹತ್ವದ ಮಾಹಿತಿಗಾಗಿ ವಿಸ್ತಾರ ನ್ಯೂಸ್ ಆ್ಯಪ್ ಉಚಿತವಾಗಿ ಡೌನ್ ಲೋಡ್ ಮಾಡಿಕೊಳ್ಳಿ: Andriod App | IOS App
Continue Reading
Click to comment

Leave a Reply

Your email address will not be published. Required fields are marked *

ಸ್ಯಾಂಡಲ್ ವುಡ್

Kannada New Movie: ಶಶಿಕುಮಾರ್ ಪುತ್ರನ ‘ಕಾದಾಡಿ’ ಸಿನಿಮಾದ ಲಿರಿಕಲ್ ಸಾಂಗ್ ಔಟ್‌!

Kannada New Movie: 90ರ ದಶಕದಲ್ಲಿ ಯಶಸ್ವಿಯ ಉತ್ತುಂಗದಲ್ಲಿದ್ದ ಶಶಿಕುಮಾರ್ ಕನ್ನಡ, ತಮಿಳು ಮತ್ತು ತೆಲುಗು ಸೇರಿದಂತೆ ಹಲವು ಭಾಷೆಗಳಲ್ಲಿ ನಟಿಸಿದ್ದು ಸೈ ಎನಿಸಿಕೊಂಡಿದ್ದರು. `ಕಾದಾಡಿ’ (Kaadaadi Movie Kannada) ಎನ್ನುವ ಚಿತ್ರದಲ್ಲಿ ಆದಿತ್ಯ ಶಶಿಕುಮಾರ್ ನಟಿಸಿದ್ದಾರೆ. ಕನ್ನಡ, ತೆಲುಗು,ಹಿಂದಿ ಮತ್ತು ತಮಿಳು ಭಾಷೆಯಲ್ಲಿ ಸಿದ್ದಗೊಂಡಿರುವ ಸಿನಿಮಾವನ್ನು ಸತೀಶ್ ಮಾಲೆಂಪಾಟಿ ನಿರ್ದೇಶಿಸಿ, ಅರುಣಂ ಫಿಲಿಂಸ್ ಮುಖಾಂತರ ನಿರ್ಮಾಣ ಮಾಡಿದ್ದಾರೆ.

VISTARANEWS.COM


on

Kannada New Movie Aditya Shashikumar Kaadaadi Movie Lyrical song out
Koo

ಬೆಂಗಳೂರು: ನಟ ಶಶಿಕುಮಾರ್ ಪುತ್ರ ಅಕ್ಷಿತ್ ಶಶಿಕುಮಾರ್ (Kannada New Movie) ಈಗ ಆದಿತ್ಯ ಶಶಿಕುಮಾರ್ (Aditya Shashikumar) ಎಂದು ಹೆಸರು ಬದಲಾಯಿಸಿಕೊಂಡಿದ್ದಾರೆ. `ಕಾದಾಡಿ’ (Kaadaadi Movie Kannada) ಎನ್ನುವ ಚಿತ್ರದಲ್ಲಿ ಆದಿತ್ಯ ಶಶಿಕುಮಾರ್ ನಟಿಸಿದ್ದಾರೆ. ಕನ್ನಡ, ತೆಲುಗು,ಹಿಂದಿ ಮತ್ತು ತಮಿಳು ಭಾಷೆಯಲ್ಲಿ ಸಿದ್ದಗೊಂಡಿರುವ ಸಿನಿಮಾವನ್ನು ಸತೀಶ್ ಮಾಲೆಂಪಾಟಿ ನಿರ್ದೇಶಿಸಿ, ಅರುಣಂ ಫಿಲಿಂಸ್ ಮುಖಾಂತರ ನಿರ್ಮಾಣ ಮಾಡಿದ್ದಾರೆ. ಪ್ರಚಾರದ ಸಲುವಾಗಿ ಮೊನ್ನೆಯಷ್ಟೇ ನಾಯಕನ ಪರಿಚಯದ ಎರಡನೇ ಲಿರಿಕಲ್ ವಿಡಿಯೋ ಹಾಡನ್ನು ಬಿಡುಗಡೆ ಮಾಡಲಾಗಿದೆ.

ಎನ್.ಮಾರುತಿ ಸಾಹಿತ್ಯದ ’ಕಲೆಯು ಇರಬೇಕು, ಮನೆಯು ಇರಬೇಕುʼʼ ಹಾಡಿಗೆ ಶಶಾಂಕ್ ಶೇಷಗಿರಿ ಧ್ವನಿಯಾಗಿದ್ದಾರೆ. ನಮ್ಮ ಜೀವನವನ್ನು ತ್ಯಾಗ ಮಾಡುವ ಮೂಲಕ ಸಮಾಜಕ್ಕೆ ಏನನ್ನಾದರೂ ಕೊಡಬೇಕು. ಇಂತಹ ಅಂಶಗಳನ್ನು ಥ್ರಿಲ್ಲರ್ ಮೂಲಕ ತೋರಿಸುವ ಪ್ರಯತ್ನ ಮಾಡಲಾಗಿದೆ.

ಲಾವಣ್ಯಸಾಹುಕಾರ, ಚಾಂದಿನಿತಮಿಳರಸನ್ ಈ ಸಿನಿಮಾಗೆ ನಾಯಕಿಯರು. ಉಳಿದಂತೆ ಪೋಸಾನಿ, ರವಿಕಾಳೆ, ಮಾರಿಮುತ್ತು, ಪ್ರೇಮ್‌ಮನೋಹರ್, ಶ್ರವಣ್‌ರಾಘವೇಂದ್ರ ಮುಂತಾದವರು ನಟಿಸಿದ್ದಾರೆ. ಆರು ಹಾಡುಗಳಿಗೆ ಭೀಮ್ಸ್ ಸಿಸಿರಿಲಿಯೋ ಸಂಗೀತ ಸಂಯೋಜಿಸಿದ್ದಾರೆ. ಡಿ.ಯೋಗಿಪ್ರಸಾದ್ ಛಾಯಾಗ್ರಹಣ ಡಿ.ಯೋಗಿಪ್ರಸಾದ್, ಕಲೆ ಅರ್ಜುನ್‌ ಸೂರಿ ಸೆಟ್ಟಿ, ಪ್ರಕಾಶ್‌ತೋಟ ಸಂಕಲನ, ನೃತ್ಯ ರಾಜ್‌ಪಿಡಿ-ರಾಜ್‌ಕೃಷ್ಣ, ಸಾಹಸ ಸಿನಿಮಾಕ್ಕಿದೆ.

ಇದನ್ನೂ ಓದಿ: Kannada New Movie: ʼಕೋಟಿʼ ಚಿತ್ರಕ್ಕೆ ಕಿಚ್ಚನ ಬಲ; ಹೊಸ ಪೋಸ್ಟರ್‌ ರಿಲೀಸ್‌

ಗೋವಾ, ಚಿಕ್ಕಮಗಳೂರು, ಹೈದರಬಾದ್, ಚೆನ್ನೈ ಸುಂದರ ತಾಣಗಳಲ್ಲಿ ಚಿತ್ರೀಕರಣ ಸನಡೆಸಲಾಗಿದೆ. ಅಂದಹಾಗೆ ಸಿನಿಮಾವು ಜೂನ್ ತಿಂಗಳಲ್ಲಿ ತೆರೆಗೆ ಬರುವ ಸಾಧ್ಯತೆ ಇದೆ.

90ರ ದಶಕದಲ್ಲಿ ಯಶಸ್ವಿಯ ಉತ್ತುಂಗದಲ್ಲಿದ್ದ ಶಶಿಕುಮಾರ್ ಕನ್ನಡ, ತಮಿಳು ಮತ್ತು ತೆಲುಗು ಸೇರಿದಂತೆ ಹಲವು ಭಾಷೆಗಳಲ್ಲಿ ನಟಿಸಿದ್ದು ಸೈ ಎನಿಸಿಕೊಂಡಿದ್ದರು. ಇದೀಗ ಅವರ ಪುತ್ರ ಚಿತ್ರರಂಗಕ್ಕೆ ಎಂಟ್ರಿ ಕೊಡುತ್ತಿದ್ದು ತಂದೆಯಂತೆ ಆದಿತ್ಯ ಸ್ಯಾಂಡಲ್ವುಡ್ ನಲ್ಲಿ ತಮ್ಮ ಮಿಂಚು ಹರಿಸುತ್ತಾರೆ ಕಾದು ನೋಡಬೇಕು.

Continue Reading

ಸ್ಯಾಂಡಲ್ ವುಡ್

Radhika Pandit: ನಟಿ ರಾಧಿಕಾ ಪಂಡಿತ್‌ ಕಮ್‌ ಬ್ಯಾಕ್‌ ಯಾವಾಗ? ಅಭಿಮಾನಿಗಳ ಪ್ರಶ್ನೆಗೆ ಕೊನೆಗೂ ಸಿಕ್ತು ಉತ್ತರ

Radhika Pandit: ಸ್ಯಾಂಡಲ್‌ವುಡ್‌ ನಟಿ ರಾಧಿಕಾ ಪಂಡಿತ್‌ ಅಭಿಮಾನಿಗಳಿಗೆ ಮತ್ತೊಮ್ಮೆ ನಿರಾಸೆಯಾಗಿದೆ. ಸ್ಯಾಂಡಲ್‌ವುಡ್‌ ಸಿಂಡ್ರೆಲ್ಲಾ ಎಂದೇ ಕರೆಯಲ್ಪಡುವ ರಾಧಿಕಾ ಪಂಡಿತ್‌ ಅವರಿಗೆ ಒಬ್ಬ ಅಭಿಮಾನಿ, ʼʼಮತ್ತೆ ನೀವು ಯಾವಾಗ ಚಿತ್ರದಲ್ಲಿ ನಟಿಸುತ್ತೀರಾ? ಬೆಳ್ಳಿ ತೆರೆಯಲ್ಲಿ ನಿಮ್ಮನ್ನು ನೋಡಲು ನಾವೆಲ್ಲ ಕಾತುರದಿಂದ ಕಾಯುತ್ತಿದ್ದೇವೆʼʼ ಎಂದು ಕೇಳಿದ್ದಾರೆ. ಇದಕ್ಕೆ ರಾಧಿಕಾ ಪಂಡಿತ್‌, ʼʼಸರಿಯಾದ ಸಮಯ ಬಂದಾಗʼʼ ಎಂದಷ್ಟೇ ಉತ್ತರಿಸಿ ಕುತೂಹಲ ತಣಿಸುವ ಬದಲು ಇನ್ನಷ್ಟು ಹೆಚ್ಚಿಸಿದ್ದಾರೆ.

VISTARANEWS.COM


on

Radhika Pandit
Koo

ಬೆಂಗಳೂರು: ಸ್ಯಾಂಡಲ್‌ವುಡ್‌ ನಟಿ ರಾಧಿಕಾ ಪಂಡಿತ್‌ (Radhika Pandit) ಅಭಿಮಾನಿಗಳಿಗೆ ಮತ್ತೊಮ್ಮೆ ನಿರಾಸೆಯಾಗಿದೆ. ಬಹು ದಿನಗಳ ನಂತರ ರಾಧಿಕಾ ಪಂಡಿತ್‌ ಸೋಷಿಯಲ್‌ ಮೀಡಿಯಾದಲ್ಲಿ ಅಭಿಮಾನಿಗಳೊಂದಿಗೆ ಮಾತುಕತೆ ನಡೆಸಿದ್ದರು. ‘ಆಸ್ಕ್ ಮಿ ಎನಿಥಿಂಗ್ʼ ಸೆಷನ್‌ ನಡೆಸಿ ಫ್ಯಾನ್ಸ್‌ ಪ್ರಶ್ನೆಗಳಿಗೆ ಉತ್ತರಿಸಿದ್ದರು. ಈ ವೇಳೆ ಅವರು ತಮ್ಮ ಹೊಸ ಚಿತ್ರದ ಬಗ್ಗೆ ಘೋಷಿಸಬಹುದು, ಕಮ್‌ ಬ್ಯಾಕ್‌ ಬಗ್ಗೆ ಮಾಹಿತಿ ನೀಡಬಹುದು ಎಂದು ಅನೇಕರು ನೀರೀಕ್ಷೆಯಲ್ಲಿ ಕಾದಿದ್ದರು. ಆದರೆ ಸದ್ಯ ಅವರಿಗೆ ನಿರಾಸೆಯಾಗಿದೆ.

ಸ್ಯಾಂಡಲ್‌ವುಡ್‌ ಸಿಂಡ್ರೆಲ್ಲಾ ಹೇಳಿದ್ದೇನು?

ಸ್ಯಾಂಡಲ್‌ವುಡ್‌ ಸಿಂಡ್ರೆಲ್ಲಾ ಎಂದೇ ಕರೆಯಲ್ಪಡುವ ರಾಧಿಕಾ ಪಂಡಿತ್‌ ಅವರಿಗೆ ಒಬ್ಬ ಅಭಿಮಾನಿ, ʼʼಮತ್ತೆ ನೀವು ಯಾವಾಗ ಚಿತ್ರದಲ್ಲಿ ನಟಿಸುತ್ತೀರಾ? ಬೆಳ್ಳಿ ತೆರೆಯಲ್ಲಿ ನಿಮ್ಮನ್ನು ನೋಡಲು ನಾವೆಲ್ಲ ಕಾತುರದಿಂದ ಕಾಯುತ್ತಿದ್ದೇವೆʼʼ ಎಂದು ಕೇಳಿದ್ದಾರೆ. ಇದಕ್ಕೆ ರಾಧಿಕಾ ಪಂಡಿತ್‌, ʼʼಸರಿಯಾದ ಸಮಯ ಬಂದಾಗʼʼ ಎಂದಷ್ಟೇ ಉತ್ತರಿಸಿ ಕುತೂಹಲ ತಣಿಸುವ ಬದಲು ಇನ್ನಷ್ಟು ಹೆಚ್ಚಿಸಿದ್ದಾರೆ. ʼʼರಾಧಿಕಾ ಉತ್ತರದಲ್ಲಿ ಸ್ಪಷ್ಟತೆ ಇಲ್ಲʼʼ, ʼʼಮತ್ತೊಮ್ಮೆ ಅವರು ಅಡ್ಡ ಗೋಡೆ ಮೇಲೆ ದೀಪ ಇಟ್ಟಂತೆ ಪ್ರತಿಕ್ರಿಯಿಸಿದ್ದಾರೆʼʼ, ʼʼಈ ಬಾರಿಯಾದರೂ ಅವರು ಚಿತ್ರರಂಗದ ಕಮ್‌ ಬ್ಯಾಕ್‌ ಬಗ್ಗೆ ಘೋಷಿಸಬಹುದು ಎಂದುಕೊಂಡಿದ್ದೆವು. ಆದರೆ ಮತ್ತೆ ನಿರಾಸೆಯಾಗಿದೆʼʼ ಎಂದೆಲ್ಲ ಫ್ಯಾನ್ಸ್‌ ಬೇಸರ ವ್ಯಕ್ತಪಡಿಸಿದ್ದಾರೆ.

ಅಭಿಮಾನಿಗಳು ಕೇಳಿದ್ದೇನು?

ʼʼಪತಿ ಮತ್ತು ಪತ್ನಿ ನಡುವಿನ ಸಂಬಂಧ ಗಟ್ಟಿಯಾಗಲು ಯಾವ ಒಂದು ಸಂಗತಿ ತುಂಬ ಮುಖ್ಯ?ʼʼ ಎಂದು ಒಬ್ಬರು ಕೇಳಿದ್ದಾರೆ. ಇದಕ್ಕೆ ನಟಿ ಉತ್ತರಿಸಿ, ʼʼಎಲ್ಲ ಉತ್ತಮ ಸಂಬಂಧಕ್ಕೆ ಫ್ರಂಡ್‌ಶಿಪ್‌ ಅತೀ ಮುಖ್ಯ. ಪತಿ-ಪತಿ, ಪೋಷಕರು-ಮಕ್ಕಳ ಮಧ್ಯೆ ಯಾವತ್ತೂ ಉತ್ತಮ ಗೆಳೆತನ ಇರಬೇಕುʼʼ ಎಂದಿದ್ದಾರೆ.

ʼʼಪ್ರತಿ ದಿನ ನೀವು ಯಾವ ರೀತಿಯ ವರ್ಕೌಟ್‌ ನಡೆಸುತ್ತೀರಿ?ʼʼ ಮತ್ತೊಬ್ಬರು ಕೇಳಿದ್ದಾರೆ. ʼʼಆರೋಗ್ಯಪೂರ್ವವಾಗಿರಲು ದೈಹಿಕ ಚಟುವಟಿಕೆ ಮುಖ್ಯ. ದೈಹಿಕ ಜತೆಗೆ ಮಾನಸಿಕ ಆರೋಗ್ಯಕ್ಕೆ ಪ್ರತಿ ದಿನ ಕನಿಷ್ಠ ಅರ್ಧ ಗಂಟೆಯಾದರೂ ವ್ಯಾಯಾಮ ಮಾಡಿ. ವಾಕಿಂಗ್‌, ಜಿಮ್‌ ವರ್ಕೌಟ್‌ ಯಾವುದೂ ಆಗಬಹುದು. ಜತೆಗೆ ಯೋಗ ಮಾಡುವುದು, ನಿಮ್ಮಿಷ್ಟದ ಕ್ರೀಡೆಯಲ್ಲಿ ತೊಡಗಿಸಿಕೊಳ್ಳುವುದನ್ನು ಮರೆಯಬೇಡಿ. ಪ್ರಕೃತಿ ಮಡಿಲಲ್ಲಿ ವಾಕಿಂಗ್‌ ಹೋಗಲು ನಾನು ಇಷ್ಟಪಡುತ್ತೇನೆʼʼ ಎಂದು ಹೇಳಿದ್ದಾರೆ.

ʼʼನಿಮ್ಮ ಹತ್ತು ವರ್ಷಗಳ ಸುಖಕರ ದಾಂಪತ್ಯದ ಗುಟ್ಟೇನು?ʼʼ ಎಂದು ಕೇಳಿದಾಗ, ʼʼಎಲ್ಲರ ನಡುವೆ ನಡೆಯುವಂತೆ ನಮ್ಮ ನಡುವೆ ಕೆಲವೊಮ್ಮೆ ವಾಗ್ವಾದ, ಚರ್ಚೆ ಕಂಡು ಬರುತ್ತದೆ. ಆದರೆ ಇದನ್ನು ಜಗಳದ ತನಕ ಕೊಂಡೊಯ್ಯುವುದಿಲ್ಲ. ಬಳಿಕ ನಮ್ಮಲ್ಲೆ ಮಾತುಕತೆ ನಡೆಸಿ ಗೊಂದಲ ಪರಿಹರಿಸುತ್ತೇವೆʼʼ ಎಂದು ರಾಧಿಕಾ ತಿಳಿಸಿದ್ದಾರೆ. ಇದರ ಜತೆಗೆ ಅನೇಕರು ಮಕ್ಕಳು ಬಗ್ಗೆಯೂ ಪ್ರಶ್ನಿಸಿದ್ದಾರೆ. ಎಲ್ಲದಕ್ಕೂ ರಾಧಿಕಾ ಸಾವಧಾನದಿಂದ ಉತ್ತರಿಸಿದ್ದಾರೆ.

ಇದನ್ನೂ ಓದಿ: Radhika Pandit: ರಾಧಿಕಾ ಪಂಡಿತ್‌ಗೆ ಜನುಮದಿನದ ಸಂಭ್ರಮ: ಅಭಿಮಾನಿಗಳಿಂದ ಬಿಗ್‌ ಸರ್‌ಪ್ರೈಸ್‌!

ಧಾರಾವಾಹಿಯಲ್ಲಿ ನಟಿಸುತ್ತಿದ್ದ ರಾಧಿಕಾ ಪಂಡಿತ್‌ 2008ರಲ್ಲಿ ತೆರೆಕಂಡ ʼಮೊಗ್ಗಿನ ಮನಸ್ಸುʼ ಚಿತ್ರದ ಮೂಲಕ ಸ್ಯಾಂಡಲ್‌ವುಡ್‌ ಪ್ರವೇಶಿಸಿದ್ದರು. ವಿಶೇಷ ಎಂದರೆ ಇದರಲ್ಲಿ ಯಶ್‌ ಕೂಡ ನಟಿಸಿದ್ದರು. ಮೊದಲ ಚಿತ್ರದಲ್ಲೇ ಮೋಡಿ ಮಾಡಿದ ಈ ಜೋಡಿ ಬಳಿಕ ʼಡ್ರಾಮʼ, ʼಮಿ. ಆ್ಯಂಡ್‌ ಮಿ. ರಾಮಾಚಾರಿʼ, ʼಸಂತು ಸ್ಟ್ರೈಟ್‌ ಫಾರ್ವರ್ಡ್‌ʼ ಮುಂತಾದ ಸಿನಿಮಾಗಳಲ್ಲಿ ಜತೆಯಾಗಿ ನಟಿಸಿದ್ದರು. ಟಾಪ್‌ ನಟಿಯರಲ್ಲಿ ಒಬ್ಬರೆನಿಸಿಕೊಂಡಿದ್ದ ರಾಧಿಕಾ 2016ರ ಡಿಸೆಂಬರ್‌ 9ರಂದು ಗೋವಾದಲ್ಲಿ ಯಶ್‌ ಜತೆ ಸಪ್ತಪದಿ ತುಳಿದಿದ್ದರು. ಬಳಿಕ ಸಿನಿಮಾದಿಂದ ಅಂತರ ಕಾಯ್ದುಕೊಂಡಿದ್ದರು.

Continue Reading

ಸ್ಯಾಂಡಲ್ ವುಡ್

Ambareesh Birthday: ಅಂಬಿ ನೆನೆದು ಸುಮಲತಾ ಭಾವನಾತ್ಮಕ ಪೋಸ್ಟ್‌ !

Ambareesh Birthday: ಕನ್ನಡ ಚಿತ್ರರಂಗದ ಅಜಾತಶತ್ರುವಾಗಿದ್ದ ಅಂಬಿ ನವೆಂಬರ್ 24, 2018ರಂದು ಹೃದಯಾಘಾತದಿಂದ ಮರಳಿ ಬಾರದ ಲೋಕಕ್ಕೆ ತೆರಳಿದರು. ಸಿನಿಮಾ ಮಾತ್ರವಲ್ಲದೆ, ರಾಜಕೀಯ ರಂಗದಲ್ಲೂ ಅಂಬರೀಶ್ ಸಾಧನೆ ಅಪಾರ. ಶಾಸಕ, ಸಂಸದ, ಸಚಿವ, ಕೇಂದ್ರ ಸಚಿವರಾಗಿಯೂ ಅವರು ಕೆಲಸ ಮಾಡಿದ್ದರು.‌ ಚಿತ್ರರಂಗದ ಯಾವುದೇ ವಿವಾದಗಳನ್ನು ಮಾತುಕತೆಯ ಮೂಲಕ ಪರಿಹರಿಸುವ ದೊಡ್ಡಣ್ಣನಂತಿದ್ದರು.

VISTARANEWS.COM


on

Ambareesh Birthday heartfelt note By sumalatha
Koo

ಬೆಂಗಳೂರು: ಮೇ 29 ಅಂಬರೀಶ್‌ (Ambareesh Birthday) ಅವರ 72ನೇ ಜನುಮದಿನ. ಕನ್ನಡದಲ್ಲಿ ಮಾತ್ರವಲ್ಲದೆ ಅಂಬರೀಶ್‌ ಅವರು ಬಾಲಿವುಡ್‌, ಟಾಲಿವುಡ್‌, ಕಾಲಿವುಡ್‌ನಲ್ಲಿಯೂ ಅಪಾರ ಸ್ನೇಹ ಬಳಗ ಹೊಂದಿದ್ದರು. ರಾಜಕೀಯದಲ್ಲಿಯೂ ಗುರುತಿಸಿಕೊಂಡಿದ್ದರು.  ಅಂಬಿ ಹುಟ್ಟುಹಬ್ಬದ ಪ್ರಯುಕ್ತ ಅನೇಕ ಸಾಮಾಜಿಕ ಕೆಲಸಗಳನ್ನು ಮಾಡಲಾಗುತ್ತಿದೆ. ಅಂಬಿ ಹುಟ್ಟು ಹಬ್ಬದ ಅಂಗವಾಗಿ ಸುಮಲತಾ ಅಂಬರೀಶ್‌ ಅವರು ಭಾವುಕವಾಗಿ ಪೋಸ್ಟ್ ಮಾಡಿದ್ದಾರೆ.

ʻʻನಿವು ಸದಾ ನೆನಪಾಗುತ್ತೀರಿ. ನಿಮ್ಮನ್ನು ನೆನಸಿಕೊಂಡಾಗಲೆಲ್ಲ ಮುಖದಲ್ಲಿ ನಗು ಮೂಡುತ್ತದೆ. ನಿಮ್ಮನ್ನು ಬಹಳ ಮಿಸ್ ಮಾಡಿಕೊಳ್ಳುತ್ತೇನೆ. ನೀವು ಎಲ್ಲಿ ವಿಶ್ರಾಂತಿ ಪಡೆಯುತ್ತೀರೋ ಅಲ್ಲಿ ನಿಮ್ಮ ಸ್ಮರಣೆಯು ನನಗೆ ಅಮೂಲ್ಯ ಮತ್ತು ಉತ್ತಮ ಎಂದು ನಾನು ಭಾವಿಸುತ್ತೇನೆ. ನೀವು ನಮ್ಮ ಜೀವನದ ಒಂದು ಭಾಗ..ಪ್ರತಿ ಕ್ಷಣ ಮತ್ತು ಎಂದೆಂದಿಗೂ..ನೀವು ಬದುಕನ್ನು ಮೀರಿದವರು.. ನೀವೇ ಜೀವನ. ಸ್ವರ್ಗದಲ್ಲಿ ಜನ್ಮದಿನದ ಶುಭಾಶಯಗಳುʼʼಎಂದು ಬರೆದುಕೊಂಡಿದ್ದಾರೆ.

ಇದನ್ನೂ ಓದಿ: Ambareesh Birthday: ಅಂಬರೀಶ್‌ ಸಿನಿಮಾಗಳ ಹಾಡಿನ ರೀಲ್ಸ್‌ನಲ್ಲಿ ಕಮಾಲ್ ಮಾಡಿದ ಅಭಿಷೇಕ್‌-ಅವಿವ ಬಿಡಪ ಜೋಡಿ

ಕನ್ನಡ ಚಿತ್ರರಂಗದ ಅಜಾತಶತ್ರುವಾಗಿದ್ದ ಅಂಬಿ ನವೆಂಬರ್ 24, 2018ರಂದು ಹೃದಯಾಘಾತದಿಂದ ಮರಳಿ ಬಾರದ ಲೋಕಕ್ಕೆ ತೆರಳಿದರು. ಸಿನಿಮಾ ಮಾತ್ರವಲ್ಲದೆ, ರಾಜಕೀಯ ರಂಗದಲ್ಲೂ ಅಂಬರೀಶ್ ಸಾಧನೆ ಅಪಾರ. ಶಾಸಕ, ಸಂಸದ, ಸಚಿವ, ಕೇಂದ್ರ ಸಚಿವರಾಗಿಯೂ ಅವರು ಕೆಲಸ ಮಾಡಿದ್ದರು.‌ ಚಿತ್ರರಂಗದ ಯಾವುದೇ ವಿವಾದಗಳನ್ನು ಮಾತುಕತೆಯ ಮೂಲಕ ಪರಿಹರಿಸುವ ದೊಡ್ಡಣ್ಣನಂತಿದ್ದರು.

ಅಂಬರೀಶ್ ಬರ್ತ್‌ಡೇ ಕಾಮನ್ ಡಿಪಿಯನ್ನು ನಟ ದರ್ಶನ್ ರಿವೀಲ್ ಮಾಡಿ ಶುಭ ಕೋರಿದ್ದರು. ಆ ಫೋಟೊ ವೈರಲ್ ಆಗುತ್ತಿದೆ.ನ್ನು ಅಭಿಮಾನಿಗಳು ಸ್ಪೆಷಲ್ ಡಿಪಿ ಪೋಸ್ಟ್ ಮಾಡಿ ಅಂಬಿ ಹುಟ್ಟುಹಬ್ಬಕ್ಕೆ ಶುಭ ಕೋರುತ್ತಿದ್ದಾರೆ.

ಅಂಬಿ ನಮ್ಮನ್ನಗಲಿ 5 ವರ್ಷಗಳು ಕಳೆದಿವೆ. ಅಂಬಿ ಸಮಾಧಿಗೆ ಅಂಬರೀಶ್ ಕುಟುಂಬಸ್ಥರಿಂದ ಪೂಜೆ ಆಗಲಿದೆ. ಪೂಜೆಯ ಬಳಿಕ ಮಂಡ್ಯಗೆ ಸುಮಲತಾ ತೆರಳಲಿದ್ದಾರೆ. ಮಂಡ್ಯದೆಲ್ಲೆಡೆ ಅಂಬರೀಶ್ ಹುಟ್ಟುಹಬ್ಬದ ಆಚರಣೆ ಆಗುತ್ತಿದೆ. ಮಧ್ಯಾಹ್ನ 3 ಗಂಟೆಗೆ ಮಂಡ್ಯದಲ್ಲಿ ಅಂಬಿ ಜನ್ಮ ಜಯಂತಿ ಆಚರಣೆ ಆಗುತ್ತಿದೆ. ಅಂಬರೀಶ್ ಹೆಸರಿನಲ್ಲಿ ಹಲವು ಗಣ್ಯರಿಗೆ ಪ್ರತಿಭಾ ಪುರಸ್ಕಾರ ನೆರವೇರಲಿದೆ.

Continue Reading

ಸ್ಯಾಂಡಲ್ ವುಡ್

Uttarakaanda Movie:  ಸವದತ್ತಿ ಯಲ್ಲಮ್ಮನ ದರ್ಶನ ಪಡೆದ ಶಿವರಾಜ್​ ಕುಮಾರ್​

Uttarakaanda Movie: ಏ.18ರಂದು ಚಿತ್ರತಂಡ ದೂದ್‌ಪೇಡ ದಿಗಂತ್‌ ಅವರ ಲುಕ್‌ ಅನಾವರಣಗೊಳಿಸಿತ್ತು. ಮಿರ್ಚಿ “ಮಲ್ಲಿಗೆ” ಎಂಬ ಪಾತ್ರದಲ್ಲಿ ತೆರೆ ಮೇಲೆ ಕಾಣಿಸಿಕೊಳ್ಳಲಿದ್ದಾರೆ. ಟೋಬಿʼ, ʼಸಪ್ತ ಸಾಗರದಾಚೆ ಸೈಡ್‌ ಬಿʼ ಮುಂತಾದ ಸಿನಿಮಾಗಳಲ್ಲಿ ಗಮನ ಸೆಳೆದಿದ್ದ ಚೈತ್ರಾ ʼಉತ್ತರಕಾಂಡʼ ಚಿತ್ರತಂಡವನ್ನು ಸೇರಿದ್ದು, ಇನ್ನಷ್ಟು ನಿರೀಕ್ಷೆ ಮೂಡಿಸಿದೆ.ಉತ್ತರ ಕರ್ನಾಟಕ ಭಾಗದಲ್ಲಿ ನಡೆಯುವ ಕಥೆಯನ್ನು ಒಳಗೊಂಡ ʼಉತ್ತರಕಾಂಡʼ ಸಿನಿಮಾಕ್ಕೆ ರೋಹಿತ್ ಪದಕಿ ಆ್ಯಕ್ಷನ್‌ ಕಟ್‌ ಹೇಳುತ್ತಿದ್ದಾರೆ. ಚೈತ್ರಾ ಆಚಾರ್ ಈ ಚಿತ್ರದಲ್ಲಿ ಲಚ್ಚಿ ಎಂಬ ಮುಖ್ಯ ಪಾತ್ರದಲ್ಲಿ ಕಾಣಿಸಿಕೊಳ್ಳಲಿದ್ದಾರೆ.

VISTARANEWS.COM


on

Uttarakaanda Movie Shivarajkumar Visits Savadatti Yallamma Temple After Uttarakaanda Movie
Koo

ಬೆಂಗಳೂರು: ಕರುನಾಡ ಚಕ್ರವರ್ತಿ ಶಿವರಾಜ್ ಕುಮಾರ್ ಸವದತ್ತಿ ಯಲ್ಲಮ್ಮ (Savadatti Yallamma) ದೇವಸ್ಥಾನಕ್ಕೆ ಭೇಟಿ ನೀಡಿದ್ದಾರೆ. ಆ ಸಂದರ್ಭದ ಫೋಟೋಗಳು ಲಭ್ಯವಾಗಿವೆ. ಬೆಳಗಾವಿಯಲ್ಲಿ “ಉತ್ತರಕಾಂಡ” ಚಿತ್ರದ ಚಿತ್ರೀಕರಣವನ್ನು ಮುಗಿಸಿಕೊಂಡು ದೇವಿಯ ದರ್ಶನ ಪಡೆದ ಶಿವಣ್ಣನಿಗೆ ಈ ಕ್ಷೇತ್ರ ಅದೃಷ್ಟವಂತೆ. ಹಿಂದೆ “ಶ್ರೀರಾಮ್”, “ಮೈಲಾರಿ” ಮುಂತಾದ (Uttarakaanda Movie) ಬ್ಲಾಕ್ ಬಸ್ಟರ್ ಚಿತ್ರಗಳ ಪಾಲಿಗೂ ಸವದತ್ತಿ ಯಲ್ಲಮ್ಮ ಅದೃಷ್ಟ ದೇವತೆ. ಹಾಗಾಗಿ “ಉತ್ತರಕಾಂಡ‌”ದ ಚಿತ್ರೀಕರಣದ ನಂತರ ಶಿವಣ್ಣ ತಾಯಿ‌ ಆಶಿರ್ವಾದವನ್ನು ಪಡೆದಿದ್ದಾರೆ.

ಕೆ.ಆರ್.ಜಿ. ಸ್ಟುಡಿಯೋಸ್ ಬ್ಯಾನರ್ ಅಡಿಯಲ್ಲಿ ಕಾರ್ತಿಕ್ ಗೌಡ ಮತ್ತು ಯೋಗಿ ಜಿ ರಾಜ್ ನಿರ್ಮಿಸಿರುವ “ಉತ್ತರಕಾಂಡ” ರೋಹಿತ್ ಪದಕಿ ನಿರ್ದೇಶನದ ಬಹು ನಿರೀಕ್ಷಿತ ಆಕ್ಷನ್ ಡ್ರಾಮಾ ಚಿತ್ರವಾಗಿದೆ. ಈ ಚಿತ್ರದಲ್ಲಿ ಕರುನಾಡ ಚಕ್ರವರ್ತಿ ಡಾ ಶಿವರಾಜ್ ಕುಮಾರ್, ನಟರಾಕ್ಷಸ ಡಾಲಿ‌ ಧನಂಜಯ, ಐಶ್ವರ್ಯ ರಾಜೇಶ್,ಭಾವನಾ‌ ಮೆನನ್, ದಿಗಂತ್ ಮಂಚಾಲೆ, ರಂಗಾಯಣ ರಘು, ವಿಜಯ್ ಬಾಬು ಮುಂತಾದವರು ನಟಿಸಿದ್ದಾರೆ. ಚಿತ್ರಕ್ಕೆ ಬಾಲಿವುಡ್ ಹೆಸರಾಂತ ಗಾಯಕ,ಸಂಗೀತ ಸಂಯೋಜಕ ಅಮಿತ್ ತ್ರಿವೇದಿ ಸಂಗೀತ ಸಂಯೋಜನೆ ಮಾಡಿದ್ದು, ಅದ್ವೈತ ಗುರುಮೂರ್ತಿ ಮುಖ್ಯ ಛಾಯಾಗ್ರಾಹಕರಾಗಿದ್ದಾರೆ.

ಏ.18ರಂದು ಚಿತ್ರತಂಡ ದೂದ್‌ಪೇಡ ದಿಗಂತ್‌ ಅವರ ಲುಕ್‌ ಅನಾವರಣಗೊಳಿಸಿತ್ತು. ಮಿರ್ಚಿ “ಮಲ್ಲಿಗೆ” ಎಂಬ ಪಾತ್ರದಲ್ಲಿ ತೆರೆ ಮೇಲೆ ಕಾಣಿಸಿಕೊಳ್ಳಲಿದ್ದಾರೆ. ಟೋಬಿʼ, ʼಸಪ್ತ ಸಾಗರದಾಚೆ ಸೈಡ್‌ ಬಿʼ ಮುಂತಾದ ಸಿನಿಮಾಗಳಲ್ಲಿ ಗಮನ ಸೆಳೆದಿದ್ದ ಚೈತ್ರಾ ʼಉತ್ತರಕಾಂಡʼ ಚಿತ್ರತಂಡವನ್ನು ಸೇರಿದ್ದು, ಇನ್ನಷ್ಟು ನಿರೀಕ್ಷೆ ಮೂಡಿಸಿದೆ.ಉತ್ತರ ಕರ್ನಾಟಕ ಭಾಗದಲ್ಲಿ ನಡೆಯುವ ಕಥೆಯನ್ನು ಒಳಗೊಂಡ ʼಉತ್ತರಕಾಂಡʼ ಸಿನಿಮಾಕ್ಕೆ ರೋಹಿತ್ ಪದಕಿ ಆ್ಯಕ್ಷನ್‌ ಕಟ್‌ ಹೇಳುತ್ತಿದ್ದಾರೆ. ಚೈತ್ರಾ ಆಚಾರ್ ಈ ಚಿತ್ರದಲ್ಲಿ ಲಚ್ಚಿ ಎಂಬ ಮುಖ್ಯ ಪಾತ್ರದಲ್ಲಿ ಕಾಣಿಸಿಕೊಳ್ಳಲಿದ್ದಾರೆ.

ಖ್ಯಾತ ನಿರ್ದೇಶಕ ಯೋಗರಾಜ್ ಭಟ್ `ಉತ್ತರಾಕಾಂಡ’ದಲ್ಲಿ (Uttarakaanda Movie) ನಟಿಸಲಿದ್ದಾರೆ‌. “ಪಾಟೀಲ” ಎಂಬ ಪಾತ್ರಕ್ಕಾಗಿ ಬಣ್ಣ ಹಚ್ಚಲಿದ್ದಾರೆ. ನಿರ್ದೇಶಕರಾಗಿ ಆ್ಯಕ್ಷನ್ ಕಟ್ ಹೇಳುತ್ತಿದ್ದ ಭಟ್ಟರು,‌ಇದೀಗ ವಿಭಿನ್ನವಾಗಿ ಆ್ಯಕ್ಷನ್ ಕಟ್ ಹೇಳಿಸಿಕೊಳ್ಳಲಿದ್ದಾರೆ‌.

ಇದನ್ನೂ ಓದಿ: Pushpa 2: ʼಪುಷ್ಪ 2ʼ ಸಿನಿಮಾ ತಂಡದಿಂದ ಅಲ್ಲು ಅರ್ಜುನ್‌ ಫ್ಯಾನ್ಸ್‌ಗೆ ಗುಡ್‌ನ್ಯೂಸ್‌; ಎರಡನೇ ಹಾಡು ರಿಲೀಸ್‌ಗೆ ಮುಹೂರ್ತ ಫಿಕ್ಸ್‌

ನಾಯಕಿ ಯಾರು?

ಚಿತ್ರತಂಡ ಆರಂಭದಲ್ಲಿ ನಾಯಕಿಯಾಗಿ ಸ್ಯಾಂಡಲ್‌ವುಡ್‌ ಕ್ವೀನ್‌ ರಮ್ಯಾ ಅವರನ್ನು ಹೆಸರಿಸಿತ್ತು. ಮಾತ್ರವಲ್ಲ ರಮ್ಯಾ ಚಿತ್ರದ ಮುಹೂರ್ತದಲ್ಲಿಯೂ ಭಾಗವಹಿಸಿದ್ದರು. ಆದರೆ ಇತ್ತೀಚೆಗೆ ಅವರು ಚಿತ್ರತಂಡದಿಂದ ಹೊರಬಂದು ಶಾಕ್‌ ನೀಡಿದ್ದರು. ಕಳೆದ ವರ್ಷ ʼಸ್ವಾತಿ ಮುತ್ತಿನ ಮಳೆ ಹನಿಯೇʼ ಚಿತ್ರದ ನಾಯಕಿ ಪಾತ್ರದಿಂದ ಹಿಂದೆ ಸರಿದಿದ್ದ ರಮ್ಯಾ ಕೆಲವು ದಿನಗಳ ಹಿಂದೆ ʼಉತ್ತರಕಾಂಡʼ ಸಿನಿಮಾದಿಂದಲೂ ಹೊರ ಬಂದಿದ್ದರು. ʼ‘ಡೇಟ್ಸ್​ ಕೊರತೆಯಿಂದಾಗಿ ನಾನು ʼಉತ್ತರಕಾಂಡʼದಲ್ಲಿ ಕೆಲಸ ಮಾಡುತ್ತಿಲ್ಲ (ಸಿನಿಮಾ ಮತ್ತು ರಾಜಕೀಯದ ಕೆಲಸಗಳನ್ನು ನಾನು ಸದ್ಯಕ್ಕೆ ಸ್ಥಗಿತಗೊಳಿಸಿದ್ದೇನೆ). ಚಿತ್ರತಂಡಕ್ಕೆ ನಾನು ಶುಭ ಹಾರೈಸುತ್ತೇನೆ’ʼ ಎಂದು ರಮ್ಯಾ ಕಾರಣ ತಿಳಿಸಿದ್ದರು. ಆ ಮೂಲಕ ಅನೇಕ ವರ್ಷಗಳ ಬಳಿಕ ಅವರನ್ನು ತೆರೆ ಮೇಲೆ ನೋಡಬೇಕೆಂಬ ಅಭಿಮಾನಿಗಳಿಗೆ ನಿರಾಸೆ ಮೂಡಿಸಿದ್ದರು.

ಉತ್ತರಕಾಂಡʼದ ಮುಹೂರ್ತ 2022ರಲ್ಲಿ‌ಯೇ ಆಗಿತ್ತು. ಆದರೆ ಇದುವರೆಗೆ ಚಿತ್ರೀಕರಣ ಆರಂಭವಾಗಿರಲಿಲ್ಲ. ಚಿತ್ರಕಥೆಯು ಬಯಲುಸೀಮೆಯ ಸಂಸ್ಕೃತಿಯನ್ನು ಎಳೆ ಎಳೆಯಾಗಿ ಬಿಚ್ಚಿಡುವುದರಿಂದ ಹಾಗೂ ಉತ್ತರ ಕರ್ನಾಟಕದ ಆಡುಭಾಷೆಯನ್ನು ಹೊಂದಿರುವುದರಿಂದ ಚಿತ್ರಕ್ಕೆ ನಿಖರವಾದ ಸಂಶೋಧನೆ ಮತ್ತು ಪ್ಲ್ಯಾನಿಂಗ್‌ನ ಅಗತ್ಯವಿತ್ತು. ಈ ಕಾರಣದಿಂದ ಮತ್ತು ಕೆಲವು ಅನಿವಾರ್ಯ ಸಂದರ್ಭಗಳಿಂದಾಗಿ ಚಿತ್ರೀಕರಣ ವಿಳಂಬಗೊಂಡಿತು. ಆದರೆ ಇದೀಗ ಸರ್ವ ಸಿದ್ಧತೆಗಳೊಂದಿಗೆ ಚಿತ್ರೀಕರಣ ಆರಂಭಗೊಂಡಿದೆʼʼ ಎಂದು ಚಿತ್ರತಂಡ ತಿಳಿಸಿದೆ. ಖ್ಯಾತ ಬಾಲಿವುಡ್ ಗಾಯಕ ಹಾಗೂ ಸಂಗೀತ ನಿರ್ದೇಶಕ ಅಮಿತ್ ತ್ರಿವೇದಿ ಚಿತ್ರಕ್ಕೆ ಸಂಗೀತ ಸಂಯೋಜನೆ ಮಾಡಲಿದ್ದು, ಅದ್ವೈತ ಗುರುಮೂರ್ತಿ ಮುಖ್ಯ ಛಾಯಾಗ್ರಾಹಕರಾಗಿ ಕಾರ್ಯ ನಿರ್ವಹಿಸುತ್ತಿದ್ದಾರೆ.

Continue Reading
Advertisement
Kannada New Movie Aditya Shashikumar Kaadaadi Movie Lyrical song out
ಸ್ಯಾಂಡಲ್ ವುಡ್13 mins ago

Kannada New Movie: ಶಶಿಕುಮಾರ್ ಪುತ್ರನ ‘ಕಾದಾಡಿ’ ಸಿನಿಮಾದ ಲಿರಿಕಲ್ ಸಾಂಗ್ ಔಟ್‌!

Viral Video
ವೈರಲ್ ನ್ಯೂಸ್13 mins ago

Viral Video: ಭಾರತ-ಚೀನಾ ಯೋಧರ ನಡುವೆ ಹಗ್ಗಜಗ್ಗಾಟ; ಗೆದ್ದವರು ಯಾರು? ವಿಡಿಯೊ ನೋಡಿ!

Aditi Prabhudeva is returning to reality show judge
ಕಿರುತೆರೆ29 mins ago

Aditi Prabhudeva: ತಾಯಿಯಾದ ಬಳಿಕ ಮತ್ತೆ ಕಿರುತೆರೆಗೆ ಎಂಟ್ರಿ ಕೊಟ್ಟ ಅದಿತಿ ಪ್ರಭುದೇವ!

Prajwal Revanna case
ಪ್ರಮುಖ ಸುದ್ದಿ35 mins ago

Prajwal Revanna Case: ಏರ್‌ಪೋರ್ಟ್‌ನಲ್ಲೇ ಎಸ್‌ಐಟಿ ಠಿಕಾಣಿ, ನಾಳೆ ಮಧ್ಯರಾತ್ರಿಯೇ ಪ್ರಜ್ವಲ್‌ ರೇವಣ್ಣ ವಶಕ್ಕೆ

Radhika Pandit
ಸ್ಯಾಂಡಲ್ ವುಡ್41 mins ago

Radhika Pandit: ನಟಿ ರಾಧಿಕಾ ಪಂಡಿತ್‌ ಕಮ್‌ ಬ್ಯಾಕ್‌ ಯಾವಾಗ? ಅಭಿಮಾನಿಗಳ ಪ್ರಶ್ನೆಗೆ ಕೊನೆಗೂ ಸಿಕ್ತು ಉತ್ತರ

Ambareesh Birthday
ಸಿನಿಮಾ1 hour ago

Ambareesh Birthday: ರೆಬಲ್‌ ಸ್ಟಾರ್‌ 72 ನೇ ಹುಟ್ಟುಹಬ್ಬ; ಅಂಬಿ ಸ್ಮರಣಾರ್ಥ ಅಭಿಮಾನಿಗಳಿಂದ ವಿವಿಧ ಕಾರ್ಯಕ್ರಮ

Ambareesh Birthday heartfelt note By sumalatha
ಸ್ಯಾಂಡಲ್ ವುಡ್1 hour ago

Ambareesh Birthday: ಅಂಬಿ ನೆನೆದು ಸುಮಲತಾ ಭಾವನಾತ್ಮಕ ಪೋಸ್ಟ್‌ !

Vastu Tips
ಧಾರ್ಮಿಕ1 hour ago

Vastu Tips: ವಾಸ್ತು ಶಾಸ್ತ್ರದ ಪ್ರಕಾರ ಪ್ರೀತಿ ಪಾತ್ರರಿಗೆ ನೀಡುವ ಉಡುಗೊರೆಗಳು ಹೀಗಿರಬೇಕು

Mani Shankar Aiyar
ದೇಶ2 hours ago

Mani Shankar Aiyar: ಮಣಿಶಂಕರ್‌ ಅಯ್ಯರ್ ಮತ್ತೊಂದು ವಿವಾದ;‌ ಪಾಕ್‌ ಬಳಿಕ ಚೀನಾ ಪರ ಬ್ಯಾಟಿಂಗ್‌!

Uttarakaanda Movie Shivarajkumar Visits Savadatti Yallamma Temple After Uttarakaanda Movie
ಸ್ಯಾಂಡಲ್ ವುಡ್2 hours ago

Uttarakaanda Movie:  ಸವದತ್ತಿ ಯಲ್ಲಮ್ಮನ ದರ್ಶನ ಪಡೆದ ಶಿವರಾಜ್​ ಕುಮಾರ್​

Sharmitha Gowda in bikini
ಕಿರುತೆರೆ8 months ago

Geetha Serial Kannada: ನಿದ್ದೆ ಕದ್ದ ಚೋರಿ! ನಟಿ `ಭಾನುಮತಿ’ ಹಾಟ್‌ ಪೋಟೊಗಳಿಗೆ ಫ್ಯಾನ್ಸ್ ಫುಲ್ ಫಿದಾ

Kannada Serials
ಕಿರುತೆರೆ8 months ago

Kannada Serials TRP: 2ನೇ ಸ್ಥಾನದಲ್ಲಿ 2 ಧಾರಾವಾಹಿಗಳು; ಟಿಆರ್‌ಪಿ ರೇಸ್‌ನಲ್ಲಿಲ್ಲ ಭಾಗ್ಯಲಕ್ಷ್ಮೀ!

Bigg Boss- Saregamapa 20 average TRP
ಕಿರುತೆರೆ7 months ago

Kannada Serials TRP: ಏಳನೇ ಸ್ಥಾನಕ್ಕೆ ʻಅಮೃತಧಾರೆʼ ಕುಸಿತ; ಬಿಗ್‌ ಬಾಸ್‌-ಸರಿಗಮಪ ಟಿಆರ್‌ಪಿ ಎಷ್ಟು?

galipata neetu
ಕಿರುತೆರೆ6 months ago

Kanyadana Serial: ಕಿರುತೆರೆಗೆ ಮತ್ತೆ ಎಂಟ್ರಿ ಕೊಟ್ಟ ʻಗಾಳಿಪಟʼ ಖ್ಯಾತಿಯ ʻನೀತುʼ!

Kannada Serials
ಕಿರುತೆರೆ8 months ago

Kannada Serials TRP: ನಾಲ್ಕನೇ ಸ್ಥಾನಕ್ಕೆ ಕುಸಿತ ಕಂಡ ʻಸೀತಾ ರಾಮʼ; ಟಿಆರ್‌ಪಿ ರೇಸ್‌ಗೆ ʻಭಾಗ್ಯಲಕ್ಷ್ಮಿʼ ಬ್ಯಾಕ್‌!

Kannada Serials
ಕಿರುತೆರೆ8 months ago

Kannada Serials TRP: ಟಿಆರ್‌ಪಿಯಲ್ಲಿ ʻಭಾಗ್ಯಲಕ್ಷ್ಮೀʼ ಹವಾ; ʻಪುಟ್ಟಕ್ಕನ ಮಕ್ಕಳುʼ ಧಾರಾವಾಹಿಗೆ ಸಂಕಷ್ಟ!

Bigg Boss' dominates TRP; Sita Rama fell to the sixth position
ಕಿರುತೆರೆ7 months ago

Kannada Serials TRP: ಟಿಆರ್‌ಪಿಯಲ್ಲಿ ʻಬಿಗ್ ಬಾಸ್ʼದೇ ಮೇಲುಗೈ; 6ನೇ ಸ್ಥಾನಕ್ಕೆ ಕುಸಿದ ʻಸೀತಾ ರಾಮʼ

geetha serial Dhanush gowda engagement
ಕಿರುತೆರೆ5 months ago

Dhanush Gowda: ಗೀತಾ ಧಾರಾವಾಹಿ ನಟನ ನಿಶ್ಚಿತಾರ್ಥ; ಭವ್ಯಾಳ ಕಮೆಂಟ್‌ ಬಾಕ್ಸ್‌ ಆಫ್‌!

varun
ಕಿರುತೆರೆ6 months ago

Brindavana Serial: ʼಬೃಂದಾವನʼ ಧಾರಾವಾಹಿಯಲ್ಲಿ ದೊಡ್ಡ ಟ್ವಿಸ್ಟ್‌; ಪ್ರಮುಖ ಪಾತ್ರಧಾರಿಯೇ ಬದಲು

Kannada Serials
ಕಿರುತೆರೆ9 months ago

Kannada Serials TRP: ಟಿಆರ್‌ಪಿಯಲ್ಲಿ ಏರಿಕೆ ಕಂಡ ʻಅಮೃತಧಾರೆʼ; ʻಗಟ್ಟಿಮೇಳʼಕ್ಕೆ ನಾಲ್ಕನೇ ಸ್ಥಾನ!

Karnataka weather Forecast
ಮಳೆ15 hours ago

Karnataka Weather : ಚಿಕ್ಕಮಗಳೂರಲ್ಲಿ ಭಾರಿ ಮಳೆ; ಯಾದಗಿರಿಯಲ್ಲಿ ಕರೆಂಟ್‌ ಕಟ್‌, ಜನರೇಟರ್‌ನಿಂದ ಮೊಬೈಲ್‌ಗಳಿಗೆ ಚಾರ್ಜಿಂಗ್‌!

tumkur murder
ತುಮಕೂರು23 hours ago

Tumkur Murder : ಮಗುವಿನ ಮುಂದೆಯೇ ಹೆಂಡತಿಯ ಕತ್ತು, ದೇಹವನ್ನು ಕತ್ತರಿಸಿ ಬಿಸಾಡಿದ ದುಷ್ಟ

Karnataka Weather Forecast
ಮಳೆ2 days ago

Karnataka Weather : ಕಡಲತೀರದಲ್ಲಿ ಅಲೆಗಳ ಅಬ್ಬರ, ಪ್ರವಾಸಿಗರಿಗೆ ಕಟ್ಟೆಚ್ಚರ; ನಾಳೆಯೂ ಗಾಳಿ ಸಹಿತ ಮಳೆ ಅಬ್ಬರ

Karnataka Rain
ಮಳೆ3 days ago

Karnataka Rain : ಯಾದಗಿರಿಯಲ್ಲಿ ಬಿರುಗಾಳಿ ಸಹಿತ ಮಳೆ; ಸಿಡಿಲು ಬಡಿದು ಎಮ್ಮೆಗಳು ಸಾವು

Basavanagudi News
ಬೆಂಗಳೂರು3 days ago

Basavanagudi News : ಪೂಜಾ ಸಾಮಗ್ರಿಗೆ ಒನ್‌ ಟು ಡಬಲ್‌ ರೇಟ್‌; ದೊಡ್ಡ ಗಣಪತಿ ದೇಗುಲದಲ್ಲಿ ಕೈ ಕೈ ಮಿಲಾಯಿಸಿದ ಭಕ್ತರು-ವ್ಯಾಪಾರಿಗಳು

Karnataka Rain
ಮಳೆ4 days ago

Karnataka Rain : ಭಾರಿ ಮಳೆಗೆ ರಸ್ತೆ ಕಾಣದೆ ರಾಜಕಾಲುವೆಗೆ ಉರುಳಿದ ಆಟೋ; ಚಾಲಕ ಸ್ಥಳದಲ್ಲೇ ಸಾವು

dina bhavishya read your daily horoscope predictions for May 23 2024
ಭವಿಷ್ಯ6 days ago

Dina Bhavishya : 12 ರಾಶಿಯವರ ಇಂದಿನ ಭವಿಷ್ಯ ಹೇಗಿದೆ? ಯಾರಿಗೆ ಶುಭ, ಯಾರಿಗೆ ಅಶುಭ ಫಲ?

Karnataka Weather Forecast
ಮಳೆ1 week ago

Karnataka Weather : ಮುಂದುವರಿಯಲಿದೆ ವರುಣಾರ್ಭಟ; ಬೆಂಗಳೂರಲ್ಲೂ ಭಾರಿ ಮಳೆ ನಿರೀಕ್ಷೆ!

Karnataka Rain
ಮಳೆ1 week ago

Karnataka Rain : ಭಾರಿ ಮಳೆಗೆ ಕರೆಂಟ್‌ ಕಟ್‌, ಕತ್ತಲಲ್ಲೇ ರೋಗಿಗಳಿಗೆ ಟ್ರೀಟ್‌ಮೆಂಟ್‌; ಮರ ಬಿದ್ದರೂ ಪಾರಾದ ತಾಯಿ-ಮಗ

Love Case Father throws hot water on man who loved his daughter for coming home
ಕೊಡಗು1 week ago

Love Case : ಮನೆಗೆ ಬಂದ ಪ್ರೇಮಿಗೆ ಕೊತ ಕೊತ ಕುದಿಯುವ ನೀರು ಎರಚಿದ ಯುವತಿ ತಂದೆ!

ಟ್ರೆಂಡಿಂಗ್‌