Shivamogga News: ಮಕ್ಕಳ ಪ್ರತಿಭೆ ಗುರುತಿಸಿ, ಪ್ರೋತ್ಸಾಹಿಸಿ: ಶಾಸಕ ಗೋಪಾಲಕೃಷ್ಣ ಬೇಳೂರು - Vistara News

ಶಿವಮೊಗ್ಗ

Shivamogga News: ಮಕ್ಕಳ ಪ್ರತಿಭೆ ಗುರುತಿಸಿ, ಪ್ರೋತ್ಸಾಹಿಸಿ: ಶಾಸಕ ಗೋಪಾಲಕೃಷ್ಣ ಬೇಳೂರು

Shivamogga News: ಪ್ರತಿಯೊಂದು ಮಗುವಿನಲ್ಲಿ ತಮ್ಮದೇ ಆದ ಪ್ರತಿಭೆ ಇರುತ್ತದೆ. ಅದನ್ನು ಗುರುತಿಸಿ, ಅವರಿಗೆ ಪ್ರೋತ್ಸಾಹಿಸಬೇಕು ಎಂದು ಶಾಸಕ ಗೋಪಾಲಕೃಷ್ಣ ಬೇಳೂರು ತಿಳಿಸಿದ್ದಾರೆ.

VISTARANEWS.COM


on

Bala Mela programme by MLA Gopalakrishna Belur
ಮಹತ್ವದ, ಕುತೂಹಲಕರ ಸುದ್ದಿಗಾಗಿ ಫಾಲೊ ಮಾಡಿ
Koo

ರಿಪ್ಪನ್‌ಪೇಟೆ: ಪ್ರತಿಯೊಂದು ಮಗುವಿನಲ್ಲಿ ತಮ್ಮದೇ ಆದ ಪ್ರತಿಭೆ ಇರುತ್ತದೆ. ಅದನ್ನು ಗುರುತಿಸಿ, ಅವರಿಗೆ ಪ್ರೋತ್ಸಾಹಿಸಬೇಕು ಎಂದು ಶಾಸಕ ಗೋಪಾಲಕೃಷ್ಣ ಬೇಳೂರು (Shivamogga News) ಹೇಳಿದರು.

ಹೊಸನಗರ ತಾಲೂಕಿನ ಬೆಳ್ಳೂರು ಗ್ರಾಮ ಪಂಚಾಯಿತಿ ವ್ಯಾಪ್ತಿಯ ಹೆಬ್ಬಳ್ಳಿ ಅಂಗನವಾಡಿ ಕೇಂದ್ರದಲ್ಲಿ ಆಯೋಜಿಸಲಾಗಿದ್ದ ಬಾಲ ಮೇಳ ಕಾರ್ಯಕ್ರಮವನ್ನು ಉದ್ಘಾಟಿಸಿ ಮಾತನಾಡಿದ ಅವರು, ಮಕ್ಕಳ ಪ್ರತಿಭೆಯನ್ನು ಬಾಲ್ಯದಲ್ಲಿ ಗುರುತಿಸಿ ಅವರುಗಳಿಗೆ ಪ್ರೋತ್ಸಾಹವನ್ನು ನೀಡಿದಾಗ ಅವರು ತಮಗೆ ಆಸಕ್ತಿ ಇರುವ ಪ್ರತಿಭೆಗಳಲ್ಲಿ ಮುಂದುವರಿದು ಅದರಲ್ಲಿ ಉತ್ತಮ ಸಾಧನೆಯನ್ನು ಮಾಡಿ, ಸಮಾಜದ ಮುಖ್ಯ ವಾಹಿನಿಗೆ ಬರುತ್ತಾರೆ ಎಂದು ಹೇಳಿದರು.

ಇದನ್ನೂ ಓದಿ: Water Crisis in Bengaluru: ನೀರು ದುರ್ಬಳಕೆ ಮಾಡಿದ್ರೆ ಹುಷಾರ್!‌ ಸೆಕ್ಯುರಿಟಿ ಫೋರ್ಸ್‌ನಿಂದ 5000 ರೂ. ದಂಡ

ರಾಜ್ಯ ಕಾಂಗ್ರೆಸ್‌ ಸರ್ಕಾರವು ಆರೋಗ್ಯ ಮತ್ತು ಶಿಕ್ಷಣಕ್ಕೆ ಹೆಚ್ಚಿನ ಆದ್ಯತೆಯನ್ನು ನೀಡುತ್ತಿದೆ ಹಾಗೂ ಚುನಾವಣಾ ಸಂದರ್ಭದಲ್ಲಿ ಪ್ರಣಾಳಿಕೆಯಲ್ಲಿ ಹೇಳಿದ ಐದು ಗ್ಯಾರಂಟಿಗಳನ್ನು ಅನುಷ್ಠಾನಗೊಳಿಸುವುದರ ಮೂಲಕ ಅಭಿವೃದ್ಧಿಗೆ ಹಗಲಿರುಳು ಶ್ರಮಿಸುತ್ತಿದೆ. ಸರ್ಕಾರ ಅನುಷ್ಠಾನಗೊಳಿಸಿರುವ ಐದು ಗ್ಯಾರಂಟಿಗಳ ಫಲಾನುಭವಿಗಳು ಅದರ ಪ್ರಯೋಜನವನ್ನು ಪಡೆದುಕೊಂಡು ಸಮಾಜದ ಮುಖ್ಯ ವಾಹಿನಿಗೆ ಬರಬೇಕು ಎಂದು ತಿಳಿಸಿದರು.

ಕಾರ್ಯಕ್ರಮದಲ್ಲಿ ಸುಮಿತ್ರ ನಾಗರಾಜ್ ಅಧ್ಯಕ್ಷತೆ ವಹಿಸಿದ್ದರು.

ಈ ಸಂದರ್ಭದಲ್ಲಿ ಗ್ರಾ.ಪಂ. ಅಧ್ಯಕ್ಷೆ ಹೇಮಾವತಿ ಸತೀಶ್, ಉಪಾಧ್ಯಕ್ಷ ತಿಮ್ಮಪ್ಪ, ಸದಸ್ಯರಾದ ರಾಜೇಶ್, ರವೀಂದ್ರ, ಕವಿತಾ, ಅರುಣ್ ಕಟ್ಟೆ, ಷಣ್ಮುಖಪ್ಪ, ಪಲ್ಲವಿ ನಾಗರಾಜ್ ಹಾಗೂ ಶಾಲಾ ಅಭಿವೃದ್ಧಿ ಅಧ್ಯಕ್ಷ ಪುರುಷೋತ್ತಮ್, ಪಿಡಿಒ ಕುಶ, ಮೇಲ್ವಿಚಾರಕಿ ಚಂದ್ರಕಲಾ, ಅಂಗನವಾಡಿ ಕಾರ್ಯಕರ್ತೆ ವೀಣಾ ಹಾಗೂ ಇತರರು ಉಪಸ್ಥಿತರಿದ್ದರು.

ಇದನ್ನೂ ಓದಿ: Road Accident: ಭೀಕರ ರಸ್ತೆ ಅಪಘಾತ; ಒಂದೇ ಕುಟುಂಬದ ಐವರ ಸಾವು

ಶಿಕ್ಷಕ ಶಿವಮೂರ್ತಿ ಎಂ.ಎಸ್. ಕಾರ್ಯಕ್ರಮ ನಿರೂಪಿಸಿದರು. ಕಿರಣ್ ಸ್ವಾಗತಿಸಿದರು, ಮೇದಿನಿ ವಂದಿಸಿದರು.

ಕ್ಷಣ ಕ್ಷಣದ ಮಾಹಿತಿಗಾಗಿ Vistara News FaceBook ಪೇಜ್ ಫಾಲೋ ಮಾಡಿ
ಮಹತ್ವದ ಮಾಹಿತಿಗಾಗಿ ವಿಸ್ತಾರ ನ್ಯೂಸ್ ಆ್ಯಪ್ ಉಚಿತವಾಗಿ ಡೌನ್ ಲೋಡ್ ಮಾಡಿಕೊಳ್ಳಿ: Andriod App | IOS App
Continue Reading
Click to comment

Leave a Reply

Your email address will not be published. Required fields are marked *

ಮಳೆ

karnataka Weather : ಕರಾವಳಿಗೆ ವರ್ಷಧಾರೆಯ ಎಚ್ಚರಿಕೆ; ಬೆಂಗಳೂರಿನಲ್ಲಿ ಹೇಗೆ?

Rain News : ಕರಾವಳಿ ಹಾಗೂ ಒಳನಾಡಿನ ಭಾಗದಲ್ಲಿ ಮಳೆಯು ಅಬ್ಬರಿಸಲಿದ್ದು, ಹವಾಮಾನ ಇಲಾಖೆ (karnataka Weather Forecast) ಮುನ್ನೆಚ್ಚರಿಕೆಯನ್ನು ನೀಡಿದೆ. ವಿವಿಧೆಡೆ ಮಳೆಯೊಂದಿಗೆ ಬಿರುಗಾಳಿ ಬೀಸಲಿದ್ದು, ಮೀನುಗಾರರಿಗೆ ಎಚ್ಚರಿಕೆ ನೀಡಲಾಗಿದೆ.

VISTARANEWS.COM


on

By

karnataka Weather Forecast
ಸಾಂದರ್ಭಿಕ ಚಿತ್ರ
Koo

ಬೆಂಗಳೂರು: ರಾಜ್ಯಾದ್ಯಂತ ವ್ಯಾಪಕವಾಗಿ ಮಧ್ಯಮದಿಂದ ಭಾರಿ ಮಳೆಯಾಗುವ (Rain News) ನಿರೀಕ್ಷೆಯಿದೆ. ಕರಾವಳಿ ಮತ್ತು ಮಲೆನಾಡು ಜಿಲ್ಲೆಗಳ ಸುತ್ತಮುತ್ತ ಪ್ರತ್ಯೇಕವಾಗಿ ಅತಿ ಹೆಚ್ಚು ಮಳೆಯಾಗುವ (Heavy Rain) ಸಾಧ್ಯತೆಯಿದೆ. ದಕ್ಷಿಣ ಒಳನಾಡು ಹಾಗೂ ಉತ್ತರ ಒಳನಾಡಿನಲ್ಲಿ ಹಗುರದಿಂದ ಮಧ್ಯಮ ಮಳೆಯಾಗಲಿದೆ. ರಾಜ್ಯದ ಪ್ರತ್ಯೇಕ ಸ್ಥಳಗಳಲ್ಲಿ ಗುಡುಗು, ಮಿಂಚು ಮತ್ತು ಗಾಳಿಯೊಂದಿಗೆ (30-40 ಕಿ.ಮೀ) ಮಳೆಯಾಗಲಿದೆ ಎಂದು ಹವಾಮಾನ ಇಲಾಖೆ ಮುನ್ಸೂಚನೆಯನ್ನು (Karnataka Weather Forecast) ನೀಡಿದೆ.

ದಕ್ಷಿಣ ಒಳನಾಡಿನ ಸಾಕಷ್ಟು ವ್ಯಾಪಕವಾದ ಹಗುರದಿಂದ ಮಧ್ಯಮ ಮಳೆಯಾಗುವ ಸಾಧ್ಯತೆಯಿದೆ. ಉತ್ತರ ಒಳನಾಡಿನಲ್ಲಿ ಸಣ್ಣ ಪ್ರಮಾಣದಲ್ಲಿ ಮಳೆಯಾಗುವ ನಿರೀಕ್ಷೆ ಇದೆ. ಬೆಳಗಾವಿ ಮತ್ತು ಕಲಬುರಗಿಯಲ್ಲಿ ಭಾರಿ ಮಳೆಯಾಗಲಿದೆ.

ಮಲೆನಾಡು ಭಾಗದಲ್ಲಿ ಭಾರಿ ಮಳೆಯಾಗುವ ಸಾಧ್ಯತೆ ಇದೆ. ಕರಾವಳಿಯಲ್ಲಿ ಸಾಧಾರಣದಿಂದ ಭಾರಿ ಮಳೆಯಾಗಲಿದೆ. ಬೆಂಗಳೂರಿನಲ್ಲಿ ಚದುರಿದಂತೆ ಸಾಧಾರಣ ಮಳೆಯಾಗುವ ನಿರೀಕ್ಷೆ ಇದೆ. ಗರಿಷ್ಠ ಮತ್ತು ಕನಿಷ್ಠ ತಾಪಮಾನಗಳು ಕ್ರಮವಾಗಿ 29 ಡಿಗ್ರಿ ಸೆಲ್ಸಿಯಸ್ ಮತ್ತು 21 ಡಿಗ್ರಿ ಸೆಲ್ಸಿಯಸ್ ಇರಲಿದೆ.

ಇದನ್ನೂ ಓದಿ: Theft case : ಕಳ್ಳತನ ಮಾಡುತ್ತಿರುವಾಗಲೇ ಕಳ್ಳ ಲಾಕ್‌; ಸಿಸಿ ಕ್ಯಾಮೆರಾ ಲೈವ್ ಸ್ಟ್ರೀಮ್ ಆಧರಿಸಿ ಅರೆಸ್ಟ್‌

ಇಲ್ಲೆಲ್ಲ ಸಿಕ್ಕಾಪಟ್ಟೆ ಮಳೆ

ಗುಡುಗು ಸಹಿತ ಭಾರೀ ಮಳೆಯಾಗುವ ಸಾಧ್ಯತೆ ಇದ್ದು, ಗಾಳಿಯು 40-50 ಕಿ.ಮೀ ವೇಗದಲ್ಲಿ ಬೀಸದಲಿದೆ. ಹೀಗಾಗಿ ದಕ್ಷಿಣ ಕನ್ನಡ, ಉಡುಪಿ, ಉತ್ತರ ಕನ್ನಡ, ಚಿಕ್ಕಮಗಳೂರು, ಹಾಸನ, ಕೊಡಗು ಮತ್ತು ಶಿವಮೊಗ್ಗ ಜಿಲ್ಲೆಗಳಿಗೆ ಐಎಂಡಿ ರೆಡ್ ಅಲರ್ಟ್ ಘೋಷಿಸಿದೆ. ಬೆಳಗಾವಿ, ಧಾರವಾಡ, ಹಾವೇರಿ, ಚಾಮರಾಜನಗರ, ದಾವಣಗೆರೆ, ಮಂಡ್ಯ ಮತ್ತು ಮೈಸೂರಿಗೆ ಆರೆಂಜ್‌ ಅಲರ್ಟ್‌ ನೀಡಲಾಗಿದೆ. ಬಾಗಲಕೋಟೆ ಮತ್ತು ಗದಗ ಜಿಲ್ಲೆಗಳಿಗೆ ಯೆಲ್ಲೋ ಅಲರ್ಟ್ ನೀಡಲಾಗಿದೆ

ಹೈವೇವ್‌ ಅಲರ್ಟ್‌!

ಜೂನ್‌ 24ರಂದು ಕರಾವಳಿಯಲ್ಲಿ ಗಂಟೆಗೆ 35 ರಿಂದ 55 ಕಿ.ಮೀ ವೇಗದಲ್ಲಿ ತೀವ್ರ ಗಾಳಿ ಬೀಸಲಿದೆ. ದಕ್ಷಿಣ ಕನ್ನಡದ ಮುಲ್ಕಿಯಿಂದ ಮಂಗಳೂರಿನವರೆಗೆ ಅಲೆಗಳ ಎಚ್ಚರಿಕೆ ನೀಡಲಾಗಿದೆ. 2.8 ರಿಂದ 3.1 ಮೀಟರ್ ವ್ಯಾಪ್ತಿಯಲ್ಲಿ ಎತ್ತರದ ಅಲೆಗಳು ಹೇಳಲಿದೆ. ಇನ್ನೂ ಉಡುಪಿಯ ಬೈಂದೂರಿನಿಂದ ಕಾಪುವರೆಗೆ ಹೈ ವೇವ್ ಅಲರ್ಟ್ ನೀಡಲಾಗಿದೆ. 2.9 – 3.2 ಮೀಟರ್ ವ್ಯಾಪ್ತಿಯಲ್ಲಿ ಎತ್ತರದ ಅಲೆಗಳ ಮುನ್ಸೂಚನೆ ನೀಡಲಾಗಿದೆ. ಉತ್ತರ ಕನ್ನಡದ ಮಾಜಾಳಿಯಿಂದ ಭಟ್ಕಳದವರೆಗೆ 3.0 -3.3 ಮೀಟರ್ ವ್ಯಾಪ್ತಿಯಲ್ಲಿ ಎತ್ತರದ ಅಲೆಗಳು ಅಪ್ಪಳಿಸಲಿದೆ. ಹೀಗಾಗಿ ಪ್ರವಾಸಿಗರು ಹಾಗೂ ಮೀನುಗಾರರು ಎಚ್ಚರಿಕೆಯಿಂದ ಇರುವಂತೆ ಸೂಚಿಸಲಾಗಿದೆ.

ಈ ಸಂಗತಿಯ ಕುರಿತು ನಿಮ್ಮ ಅನಿಸಿಕೆ ಏನು? ಕಾಮೆಂಟ್ ಮೂಲಕ ತಿಳಿಸಿ

Continue Reading

ಕರ್ನಾಟಕ

Abbi Falls: ಅಬ್ಬಿ ಫಾಲ್ಸ್ ಬಳಿ ಸೆಲ್ಫಿ ಕ್ರೇಜ್‌ಗೆ ಯುವಕ ಬಲಿ; ಕೊಡಗಿನಲ್ಲಿ ಮತ್ತೆ ಪ್ರವಾಸಿಗರ ಮೇಲೆ ಹಲ್ಲೆ

Abbi Falls: ಶಿವಮೊಗ್ಗ ಜಿಲ್ಲೆಯ ಹೊಸನಗರ ತಾಲೂಕಿನ ಯಡೂರು ಸಮೀಪದ ಅಬ್ಬಿ ಜಲಪಾತದ ಬಳಿ ಸೆಲ್ಫಿ ತೆಗೆದುಕೊಳ್ಳಲು ಹೋದಾಗ ದುರಂತ ನಡೆದಿದೆ.

VISTARANEWS.COM


on

Abbi Falls
Koo

ಶಿವಮೊಗ್ಗ: ಸೆಲ್ಫಿ ಕ್ರೇಜ್‌ಗೆ ಯುವಕ ಬಲಿಯಾಗಿರುವ ಘಟನೆ ಜಿಲ್ಲೆಯ ಹೊಸನಗರ ತಾಲೂಕಿನ ಯಡೂರು ಸಮೀಪದ ಅಬ್ಬಿ ಜಲಪಾತದ (Abbi Falls) ಬಳಿ ನಡೆದಿದೆ. ಫಾಲ್ಸ್‌ ಬಳಿ ಸೆಲ್ಫಿ ತೆಗೆದುಕೊಳ್ಳಲು ಹೋದಾಗ ಕಾಲು ಜಾರಿ ಬಿದ್ದು ಪ್ರವಾಸಿಗ ಮೃತ ಪಟ್ಟಿದ್ದಾನೆ.

ಬಳ್ಳಾರಿ ಮೂಲದ ವಿನೋದ್ (26) ಮೃತ ಯುವಕ. ಬೆಂಗಳೂರಿನಿಂದ ಪ್ರವಾಸಕ್ಕೆಂದು 12 ಯುವಕರ ತಂಡ ಅಬ್ಬಿ ಫಾಲ್ಸ್‌ಗೆ ಬಂಇತ್ತು. ಈ ವೇಳೆ ಜಲಪಾತ ಬಳಿ ನಿಂತು ಯುವಕ ಸೆಲ್ಫಿ ತೆಗೆದುಕೊಳ್ಳುತ್ತಿದ್ದಾಗ ಕಾಲು ಜಾರಿ ಬಿದ್ದು ನೀರು ಪಾಲಾಗಿದ್ದಾನೆ. ಸ್ಥಳಕ್ಕೆ ಅಗ್ನಿಶಾಮಕ ದಳ ಸಿಬ್ಬಂದಿ ಹಾಗೂ ಪೊಲೀಸರು ಭೇಟಿ ನೀಡಿ, ಮೃತ ದೇಹಕ್ಕಾಗಿ ಶೋಧ ಕಾರ್ಯ ನಡೆಸುತ್ತಿದ್ದಾರೆ.

ಕೋಟೆ ಬೆಟ್ಟ ವೀಕ್ಷಣೆಗೆ ಬಂದಿದ್ದ ಪ್ರವಾಸಿಗರ ಮೇಲೆ ಹಲ್ಲೆ

ಕೊಡಗು: ಜಿಲ್ಲೆಯಲ್ಲಿ ಪ್ರವಾಸಿಗರ ಮೇಲಿನ ಹಲ್ಲೆ ಪ್ರಕರಣ ಮತ್ತೆ ಮರುಕಳಿಸಿದೆ. ಮಾದಪುರ ಸಮೀಪದ ಕೋಟೆ ಬೆಟ್ಟದಲ್ಲಿ ನಡೆದ ಘಟನೆ ನಡೆದಿದ್ದು, ಪ್ರವಾಸಿಗರ ಮೇಲೆ ಹಲ್ಲೆ, ದೌರ್ಜನ್ಯದಿಂದ ಮಕ್ಕಳು, ಮಹಿಳೆಯರು ಭಯಭೀತರಾಗಿದ್ದಾರೆ.

ಸೋಮವಾರಪೇಟೆ ತಾಲೂಕಿನ ಕೋಟೆ (Kote Betta) ಬೆಟ್ಟ ವೀಕ್ಷಣೆಗೆ ಪುತ್ತೂರು ಮೂಲದ ಕುಟುಂಬ ಬಂದಿತ್ತು. ಬೈಕ್‌ನಲ್ಲಿ ಬಂದ ಇಬ್ಬರು ಯುವಕರು ಪ್ರವಾಸಿಗರ ಮೇಲೆ ಹಲ್ಲೆ ನಡೆಸಿದ್ದು, ಚಿನ್ನದ ಸರವನ್ನೂ ಎಗರಿಸಿ ಪರಾರಿಯಾಗಿದ್ದಾರೆ. ಪ್ರವಾಸಿಗರು ನೀಡಿದ ದೂರಿನ ಮೇರೆಗೆ ಸೋಮವಾರಪೇಟೆ ಪೊಲೀಸ್ ಠಾಣೆಯಲ್ಲಿ ಪ್ರಕರಣ ದಾಖಲಾಗಿದೆ.

ಇದನ್ನೂ ಓದಿ | Bomb Threat: ದಿಲ್ಲಿ ಏರ್‌ಪೋರ್ಟ್‌ಗೆ ಬಾಂಬ್‌ ಬೆದರಿಕೆ ಕರೆ; ಬಾಲಕ ಅರೆಸ್ಟ್‌

ವೇಗವಾಗಿ ಬಂದು ಬೈಕ್‌ಗೆ ರಭಸವಾಗಿ ಗುದ್ದಿದ ಬಸ್‌; ನಜ್ಜುಗುಜ್ಜಾದ ಸವಾರ

ಶಿವಮೊಗ್ಗ: ಭೀಕರ ರಸ್ತೆ ಅಪಘಾತದಲ್ಲಿ (Road Accident) ಯುವಕನೊಬ್ಬ ಸ್ಥಳದಲ್ಲೇ ಉಸಿರು ಚೆಲ್ಲಿದ್ದಾನೆ. ಚಾಲಕನ ನಿಯಂತ್ರಣ ತಪ್ಪಿ ಬೈಕ್‌ಗೆ ಬಸ್‌ವೊಂದು ಡಿಕ್ಕಿ ಹೊಡೆದಿದೆ. ಡಿಕ್ಕಿ ರಭಸಕ್ಕೆ ಬಸ್‌ನಡಿ ಸಿಲುಕಿದ ಸವಾರನ ಕರುಳು ಹೊರಬಂದಿತ್ತು. ಶಿವಮೊಗ್ಗ (Shivamogga News) ನಗರದ ಊರುಗಡೂರು ಸರ್ಕಲ್ ಬಳಿ ಈ ಘಟನೆ ನಡೆದಿದೆ.

ಸಂತೋಷ್ (23) ಮೃತ ದುರ್ದೈವಿ. ರಾಜಹಂಸ ಬಸ್‌ ಬೆಂಗಳೂರಿನಿಂದ ಬರುತ್ತಿತ್ತು. ಬೈಕ್‌ನಲ್ಲಿದ್ದ ಸಂತೋಷ್‌ಗೆ ಡಿಕ್ಕಿ ಹೊಡೆದಿದೆ. ಬೈಕ್‌ ಸಮೇತ ಬಸ್‌ನಡಿ ಸಿಲುಕಿದ ಸಂತೋಷ್‌ ಸ್ಥಳದಲ್ಲೇ ಮೃತಪಟ್ಟಿದ್ದರು. ವಿಷಯ ತಿಳಿಯುತ್ತಿದ್ದಂತೆ ಸ್ಥಳಕ್ಕೆ ಪಶ್ಚಿಮ ಸಂಚಾರ ಪೊಲೀಸರು ಭೇಟಿ ನೀಡಿ ಪರಿಶೀಲನೆ ನಡೆಸಿದ್ದಾರೆ.

ಬಸ್ಸಿನಡಿ ಸಿಲುಕಿದ್ದ ಮೃತದೇಹವನ್ನು ಹೊರತೆಗೆದು ಮರಣೋತ್ತರ ಪರೀಕ್ಷೆಗಾಗಿ ಆಸ್ಪತ್ರೆಗೆ ರವಾನಿಸಿದ್ದಾರೆ. ಪಶ್ಚಿಮ ಠಾಣೆಯಲ್ಲಿ ಈ ಸಂಬಂಧ ಪ್ರಕರಣ ದಾಖಲಾಗಿದ್ದು, ವಾಹನಗಳನ್ನು ವಶಕ್ಕೆ ಪಡೆಸಿಕೊಂಡಿದ್ದಾರೆ.

Continue Reading

ಕರ್ನಾಟಕ

Physical Abuse: ಲೈಂಗಿಕ ದುರ್ಬಳಕೆ ಆರೋಪ; ಶಿವಮೊಗ್ಗದಲ್ಲಿ ಬಿಜೆಪಿ ಕಾರ್ಯಕರ್ತನ ಬಂಧನ

Physical Abuse: ಶಿವಮೊಗ್ಗದಲ್ಲಿ ಮಹಿಳೆಯನ್ನು ಲೈಂಗಿಕವಾಗಿ ದುರ್ಬಳಕೆ ಮಾಡಿಕೊಂಡ ಆರೋಪದಲ್ಲಿ ಬಿಜೆಪಿ ಸಕ್ರಿಯ ಕಾರ್ಯಕರ್ತನನ್ನು ಪೊಲೀಸರು ಬಂಧಿಸಿದ್ದಾರೆ.

VISTARANEWS.COM


on

BJP Worker
Koo

ಶಿವಮೊಗ್ಗ: ಮಹಿಳೆಯನ್ನು ಲೈಂಗಿಕವಾಗಿ ದುರ್ಬಳಕೆ (Physical Abuse) ಮಾಡಿಕೊಂಡ ಆರೋಪದಲ್ಲಿ ಬಿಜೆಪಿ ಯುವ ಮೋರ್ಚಾ ಜಿಲ್ಲಾ ಪ್ರಧಾನ ಕಾರ್ಯದರ್ಶಿ ಬಂಧನವಾಗಿದೆ. ಮಹಿಳೆ ನೀಡಿದ ದೂರಿನ ಮೇರೆಗೆ ಶಿವಮೊಗ್ಗ ಮಹಿಳಾ ಪೊಲೀಸ್ ಠಾಣೆಯಲ್ಲಿ ಎಫ್‌ಐಆರ್‌ ದಾಖಲಾಗಿದ್ದು, ಇನ್ನು 5 ದಿನಗಳಲ್ಲಿ ಹಸೆಮಣೆ ಏರಬೇಕಿದ್ದ ಬಿಜೆಪಿ ಸಕ್ರಿಯ ಕಾರ್ಯಕರ್ತನನ್ನು ಪೊಲೀಸರು ಬಂಧಿಸಿದ್ದಾರೆ.

ಬಿಜೆಪಿ ಯುವ ಮೋರ್ಚಾ ಜಿಲ್ಲಾ ಪ್ರಧಾನ ಕಾರ್ಯದರ್ಶಿ ಅರುಣ್ ಕುಗ್ವೆ ಬಂಧಿತ ಆರೋಪಿ. ಮಹಿಳೆಯೊಬ್ಬರು ಲೈಂಗಿಕವಾಗಿ ದುರ್ಬಳಕೆ ಮಾಡಿಕೊಂಡಿದ್ದಾರೆ ಎಂದು ಆರೋಪಿಸಿದ ಹಿನ್ನೆಲೆಯಲ್ಲಿ ಶಿವಮೊಗ್ಗ ಮಹಿಳಾ ಪೊಲೀಸ್ ಠಾಣೆಯಲ್ಲಿ ಪ್ರಕರಣ ದಾಖಲಾಗಿತ್ತು. ಹೀಗಾಗಿ ಬಿಜೆಪಿ ಸಕ್ರಿಯ ಕಾರ್ಯಕರ್ತನಾಗಿರುವ ಅರುಣ್ ಕುಗ್ವೆಯನ್ನು ಪೊಲೀಸರು ಬಂಧಿಸಿದ್ದಾರೆ.

ಜೂ. 28ಕ್ಕೆ ಅರುಣ್ ಕುಗ್ವೆ ಮದುವೆ ಫಿಕ್ಸ್ ಆಗಿತ್ತು. ಮುಂದಿನ 5 ದಿನಗಳಲ್ಲಿ ಹಸೆಮಣೆ ಏರಬೇಕಿದ್ದ ಅರುಣ್‌ನನ್ನು ಇದೀಗ ಪೊಲೀಸರು ಬಂಧಿಸಿ, ಸ್ವಾಮಿ ವಿವೇಕಾನಂದ ಬಡಾವಣೆಯಲ್ಲಿರುವ ನ್ಯಾಯಾಧೀಶರ ನಿವಾಸಕ್ಕೆ ಹಾಜರುಪಡಿಸಿದ್ದಾರೆ.

ಇದನ್ನೂ ಓದಿ | Mayur Mohite: ಶಾಸಕನ ಸೋದರಳಿಯ ಚಲಾಯಿಸುತ್ತಿದ್ದ ಕಾರು ಡಿಕ್ಕಿ ಹೊಡೆದು ಯುವಕ ಸಾವು

ಅಂತರ್ಜಾತಿ ವಿವಾಹಕ್ಕೆ ಪ್ರಿಯಕರನ ಪೋಷಕರು ಅಡ್ಡಿ; ಕಟ್ಟಡದಿಂದ ಜಿಗಿದು ಯುವತಿ ಸೂಸೈಡ್‌

Love Failure

ರಾಯಚೂರು: ರಾಯಚೂರಿನಲ್ಲಿ ಅಂತರ್ಜಾತಿ ವಿವಾಹಕ್ಕೆ (Love Failure) ಯುವಕನ ಕಡೆಯವರ ಅಡ್ಡಿ ಆಗಿದ್ದಕ್ಕೆ ಮನನೊಂದ ಯುವತಿಯೊಬ್ಬಳು ಸಾಂತ್ವನ ಕೇಂದ್ರದ ಹಾಸ್ಟೆಲ್‌ ಕಟ್ಟಡದಿಂದ ಜಿಗಿದು ಯುವತಿ ಆತ್ಮಹತ್ಯೆ (Self Harming) ಮಾಡಿಕೊಂಡಿದ್ದಾನೆ. ಅನುರಾಧ (18) ಆತ್ಮಹತ್ಯೆ ಮಾಡಿಕೊಂಡವಳು.

ರಾಯಚೂರು ನಗರದ ಜಲಾಲ್ ನಗರದ ನಿವಾಸಿಯಾದ ಅನುರಾಧ, ವಿನಯ್ ರೆಡ್ಡಿ ಎಂಬ ಯುವಕನನ್ನು ಪ್ರೀತಿಸುತ್ತಿದ್ದಳು. ಈ ನಡುವೆ ಇವರಿಬ್ಬರು ಮದುವೆಯಾಗಲು ಸಹ ನಿಶ್ಚಯಿಸಿದ್ದರು. ಆದರೆ ಯುವತಿ ಕೆಳಜಾತಿಯವಳು ಎಂಬ ವಿಚಾರಕ್ಕೆ ವಿನಯ್‌ ಕುಟುಂಬಸ್ಥರು ಕ್ಯಾತೆ ತೆಗೆದಿದ್ದರು ಎನ್ನಲಾಗಿದೆ.

ಈ ವಿಚಾರ ತಿಳಿದು ಪೊಲೀಸ್ ಠಾಣೆಗೆ ಪೋಷಕರು ದೂರು ನೀಡಿದ್ದರು. ಯುವಕನ ಮನೆಯವರು ಮದುವೆಗೆ ಒಪ್ಪದ ಹಿನ್ನೆಲೆಯಲ್ಲಿ ಪೊಲೀಸರು ಯುವತಿಯನ್ನು ಸಾಂತ್ವನ ಕೇಂದ್ರಕ್ಕೆ ಕಳುಹಿಸಿದ್ದರು. ಇದರಿಂದ ಮನನೊಂದ ಅನುರಾಧ ಸಾಂತ್ವನ ಕೇಂದ್ರದ ಹಾಸ್ಟೆಲ್ ಕಟ್ಟಡದಿಂದ ಜಿಗಿದು ಆತ್ಮಹತ್ಯೆ ಮಾಡಿಕೊಂಡಿದ್ದಾಳೆ.

ಇದನ್ನೂ ಓದಿ | Suraj Revanna Case: ಸೂರಜ್‌ʼಗೇʼ ಸಂಕಷ್ಟ; ಸಂತ್ರಸ್ತನ ವಿರುದ್ಧ ದೂರು ನೀಡಿದ್ದ ಆಪ್ತ ಪರಾರಿ!

ಕೂಡಲೇ ಆಕೆಯನ್ನು ಆಸ್ಪತ್ರೆಗೆ ದಾಖಲು ಮಾಡಲಾಗಿದೆ. ಆದರೆ ಮೇಲಿಂದ ಬಿದ್ದ ರಭಸಕ್ಕೆ ಅನುರಾಧ ಮೃತಪಟ್ಟಿದ್ದಾಳೆ. ಮೃತ ಕುಟುಂಬಸ್ಥರ ಆಕ್ರಂದನ ಮುಗಿಲು ಮುಟ್ಟಿದೆ. ಸದ್ಯ ರಿಮ್ಸ್ ಆಸ್ಪತ್ರೆಯಲ್ಲಿ ಮರಣೋತ್ತರ ಪರೀಕ್ಷೆ ಬಳಿಕ ಮೃತದೇಹವನ್ನು ಹಸ್ತಾಂತರ ಮಾಡಲಾಗಿದೆ. ಪಶ್ಚಿಮ ಪೊಲೀಸ್ ಠಾಣಾ ವ್ಯಾಪ್ತಿಯಲ್ಲಿ ಪ್ರಕರಣ ದಾಖಲಾಗಿದೆ.

Continue Reading

ಮಳೆ

karnataka Weather : ನಾಳೆಗೆ ಹೈವೇವ್‌ ಅಲರ್ಟ್‌- ಬಿರುಗಾಳಿ ಸಹಿತ ಮಳೆಯೊಂದಿಗೆ ಅಪ್ಪಳಿಸಲಿದೆ ರಕ್ಕಸ ಅಲೆ

karnataka Weather Forecast : ಕರಾವಳಿಯಲ್ಲಿ ಬಿರುಗಾಳಿ ಬೀಸಲಿದ್ದು, ಕಡಲತೀರದಲ್ಲಿ ಅಲೆಗಳು ಅಪ್ಪಳಿಸಲಿದೆ. ಹಲವಡೆ ಹೈವೇವ್‌ ಅಲರ್ಟ್‌ ನೀಡಲಾಗಿದ್ದು, ಗುಡುಗು ಸಹಿತ ಬಿರುಗಾಳಿಯೊಂದಿಗೆ (Rain News) ಮಳೆಯಾಗಲಿದೆ.

VISTARANEWS.COM


on

By

karnataka Weather Forecast
ಸಾಂದರ್ಭಿಕ ಚಿತ್ರ
Koo

ಬೆಂಗಳೂರು: ರಾಜ್ಯಾದ್ಯಂತ ಇಂದಿನಿಂದ ಜೂನ್‌ 25ರವರೆಗೆ ಪ್ರತ್ಯೇಕ ಕಡೆಗಳಲ್ಲಿ ಭಾರಿ ಮಳೆಯಾಗುವ (Heavy rain) ಸಾಧ್ಯತೆ ಇದೆ. ಕರಾವಳಿ ಮತ್ತು ದಕ್ಷಿಣ ಒಳನಾಡಿನ ಸುತ್ತಮುತ್ತ ವ್ಯಾಪಕ (Rain News) ಮಳೆಯಾಗಲಿದ್ದು, ಬಲವಾದ ಗಾಳಿಯು ಬೀಸಲಿದೆ. ಕೆಲವೆಡೆ ಭೂ ಕುಸಿತವಾಗುವ ಸಾಧ್ಯತೆ ಕುರಿತು ಹವಾಮಾನ ಇಲಾಖೆ (Karnataka Weather Forecast) ಮುನ್ಸೂಚನೆಯನ್ನು ನೀಡಿದೆ.

ಉತ್ತರ ಒಳನಾಡಿನ ಬೀದರ್‌, ಕಲಬುರಗಿ, ಕೊಪ್ಪಳ, ರಾಯಚೂರು, ವಿಜಯಪುರ, ಯಾದಗಿರಿ, ಬಳ್ಳಾರಿ ಸೇರಿದಂತೆ ದಕ್ಷಿಣ ಒಳನಾಡಿನ ಬೆಂಗಳೂರು ಗ್ರಾಮಾಂತರ, ಬೆಂಗಳೂರು ನಗರ, ಚಿಕ್ಕಬಳ್ಳಾಪುರ, ಚಿತ್ರದುರ್ಗ, ಕೋಲಾರ, ರಾಮನಗರ, ತುಮಕೂರು, ವಿಜಯನಗರದ ಹಲವೆಡೆ ಬಿರುಗಾಳಿ ಸಹಿತ (40-50 ಕಿ.ಮೀ) ಗುಡುಗಿನೊಂದಿಗೆ ಸಾಧಾರಣ ಮಳೆಯಾಗುವ ಸಾಧ್ಯತೆ ಇದೆ.

ಈ ಜಿಲ್ಲೆಗಳಿಗೆ ಎಚ್ಚರಿಕೆ

ಕರಾವಳಿಯ ದಕ್ಷಿಣ ಕನ್ನಡ, ಉತ್ತರ ಕನ್ನಡ, ಉಡುಪಿಯಲ್ಲಿ ಪ್ರತ್ಯೇಕ ಕಡೆಗಳಲ್ಲಿ ಭಾರಿ ಮಳೆಯಾಗುವ ಎಚ್ಚರಿಕೆಯನ್ನು ನೀಡಲಾಗಿದೆ. ಒಳನಾಡಿನ ಬೆಳಗಾವಿ, ಧಾರವಾಡ, ಹಾವೇರಿ, ಶಿವಮೊಗ್ಗ, ಚಿಕ್ಕಮಗಳೂರು ಹಾಗೂ ಹಾಸನ, ಕೊಡಗು ಜಿಲ್ಲೆಗಳಲ್ಲಿ ಗಾಳಿ ವೇಗವು 40-50 ಕಿ,ಮೀ ವ್ಯಾಪ್ತಿಯಲ್ಲಿ ಬೀಸಲಿದ್ದು, ಗುಡುಗು ಸಹಿತ ಮಳೆಯಾಗುವ ಮುನ್ಸೂಚನೆ ನೀಡಲಾಗಿದೆ. ಬಾಗಲಕೋಟೆ, ಗದಗ, ಚಾಮರಾಜನಗರ, ಮೈಸೂರು, ಮಂಡ್ಯ, ದಾವಣಗೆರೆಯಲ್ಲೂ ವಿಪರೀತ ಮಳೆಯಾಗಲಿದೆ.

ಹೈವೇವ್‌ ಅಲರ್ಟ್‌!

ಜೂನ್‌ 24ರಂದು ಕರಾವಳಿಯಲ್ಲಿ ಗಂಟೆಗೆ 35 ರಿಂದ 55 ಕಿ.ಮೀ ವೇಗದಲ್ಲಿ ತೀವ್ರ ಗಾಳಿ ಬೀಸಲಿದೆ. ದಕ್ಷಿಣ ಕನ್ನಡದ ಮುಲ್ಕಿಯಿಂದ ಮಂಗಳೂರಿನವರೆಗೆ ಅಲೆಗಳ ಎಚ್ಚರಿಕೆ ನೀಡಲಾಗಿದೆ. 2.8 ರಿಂದ 3.1 ಮೀಟರ್ ವ್ಯಾಪ್ತಿಯಲ್ಲಿ ಎತ್ತರದ ಅಲೆಗಳು ಹೇಳಲಿದೆ. ಇನ್ನೂ ಉಡುಪಿಯ ಬೈಂದೂರಿನಿಂದ ಕಾಪುವರೆಗೆ ಹೈ ವೇವ್ ಅಲರ್ಟ್ ನೀಡಲಾಗಿದೆ. 2.9 – 3.2 ಮೀಟರ್ ವ್ಯಾಪ್ತಿಯಲ್ಲಿ ಎತ್ತರದ ಅಲೆಗಳ ಮುನ್ಸೂಚನೆ ನೀಡಲಾಗಿದೆ. ಉತ್ತರ ಕನ್ನಡದ ಮಾಜಾಳಿಯಿಂದ ಭಟ್ಕಳದವರೆಗೆ 3.0 -3.3 ಮೀಟರ್ ವ್ಯಾಪ್ತಿಯಲ್ಲಿ ಎತ್ತರದ ಅಲೆಗಳು ಅಪ್ಪಳಿಸಲಿದೆ. ಹೀಗಾಗಿ ಪ್ರವಾಸಿಗರು ಹಾಗೂ ಮೀನುಗಾರರು ಎಚ್ಚರಿಕೆಯಿಂದ ಇರುವಂತೆ ಸೂಚಿಸಲಾಗಿದೆ.

ಇದನ್ನೂ ಓದಿ: Bengaluru Power Cut: ತುರ್ತು ನಿರ್ವಹಣಾ ಕೆಲಸ; ಜೂ.25ರಂದು ಬೆಂಗಳೂರಿನಲ್ಲಿ ವಿದ್ಯುತ್‌ ಕಡಿತ

ಕರಾವಳಿಯಲ್ಲಿ ಮಳೆಯಾಟ

ನೈರುತ್ಯ ಮುಂಗಾರು ರಾಜ್ಯದಲ್ಲಿ ದುರ್ಬಲವಾಗಿತ್ತು. ಕರಾವಳಿಯ ಬಹುತೇಕ ಕಡೆಗಳಲ್ಲಿ, ಒಳನಾಡಿನ ಒಂದೆರಡು ಕಡೆಗಳಲ್ಲಿ ಮಳೆಯಾಗಿದೆ. ದಕ್ಷಿಣ ಕನ್ನಡದ ಪಣಂಬೂರು, ಬೀದರ್‌ನ ಭಾಲ್ಕಿಯಲ್ಲಿ 5 ಸೆಂ.ಮೀ ಮಳೆಯಾಗಿದೆ. ಮಂಗಳೂರು ವಿಮಾನ ನಿಲ್ದಾಣ, ಕೊಟ್ಟಿಗೆಹಾರದಲ್ಲಿ 4 ಸೆಂ.ಮೀ, ಉಡುಪಿ, ಸುಳ್ಯ, ಬಾದಾಮಿ, ದೇವರಹಿಪ್ಪರಗಿಯಲ್ಲಿ 3 ಸೆಂ.ಮೀ ಮಳೆ ಸುರಿದಿದೆ.

ಧರ್ಮಸ್ಥಳ, ಮಂಕಿ, ಪುತ್ತೂರು, ಅಂಕೋಲಾ, ರೋಣ, ಭಾಗಮಂಡಲ, ಆಗುಂಬೆಯಲ್ಲಿ ತಲಾ 2 ಸೆಂ.ಮೀನಷ್ಟು ಮಳೆಯಾಗಿದೆ. ಕಾರವಾರ, ಮೂಲ್ಕಿ, ಕುಂದಾಪುರ, ಬೆಳ್ತಂಗಡಿ, ಹೊನ್ನಾವರ, ಕಾರ್ಕಳ , ಉಪ್ಪಿನಂಗಡಿ , ನರಗುಂದ, ನಿಪ್ಪಾಣಿ, ಶಹಪುರ, ಕುಷ್ಟಗಿ, ಲಿಂಗನಮಕ್ಕಿ ಎಚ್‌ಎಂಎಸ್ , ಪೊನ್ನಂಪೇಟೆಯಲ್ಲಿ 1 ಸೆಂ.ಮೀ ಮಳೆಯಾಗಿದೆ.

ಈ ಸಂಗತಿಯ ಕುರಿತು ನಿಮ್ಮ ಅನಿಸಿಕೆ ಏನು? ಕಾಮೆಂಟ್ ಮೂಲಕ ತಿಳಿಸಿ

Continue Reading
Advertisement
Divorce
ದೇಶ28 mins ago

Divorce: ತೂಕ ಇಳಿಸಿಕೊಳ್ಳಲು ನೆರವಾಗದ ‘ಜಿಮ್‌ ಟ್ರೇನರ್‌’ ಗಂಡನಿಗೆ ಮಹಿಳೆ ಡಿವೋರ್ಸ್‌!

Crush Saree Fashion
ಫ್ಯಾಷನ್33 mins ago

Crush Saree Fashion: ಸೆಲೆಬ್ರೆಟಿ ಲುಕ್‌ ನೀಡುವ ಡಿಸೈನರ್‌ ಕ್ರಶ್‌ ಸೀರೆಗಳು

ಕರ್ನಾಟಕ36 mins ago

Renuka Swamy Murder: ರೇಣುಕಾಸ್ವಾಮಿ ಹತ್ಯೆ ಕೇಸ್‌ನ 4 ಆರೋಪಿಗಳು ತುಮಕೂರು ಜೈಲಿಗೆ ಶಿಫ್ಟ್; ಕಾರಣವೇನು?

union Minister Pralhad Joshi took oath in the name of God in his mother tongue
ಕರ್ನಾಟಕ46 mins ago

Pralhad Joshi: ಮಾತೃಭಾಷೆ, ದೇವರ ಹೆಸರಿನಲ್ಲಿ ಪ್ರಮಾಣ ವಚನ ಸ್ವೀಕರಿಸಿದ ಸಚಿವ ಪ್ರಲ್ಹಾದ್‌ ಜೋಶಿ

Divisional Level Progress Review Meeting of Revenue Department by Minister Krishna Byregowda
ಕಲಬುರಗಿ52 mins ago

krishna byre gowda: ಪಹಣಿ-ಆಧಾರ್ ಲಿಂಕ್‌ ಮಾಡಲು ಜುಲೈಗೆ ಅಂತಿಮ ಗಡುವು; ಕೃಷ್ಣ ಬೈರೇಗೌಡ

Hardeep Singh Nijjar
ದೇಶ58 mins ago

Hardeep Singh Nijjar: ಪಾಕಿಸ್ತಾನಕ್ಕೂ ಭೇಟಿ ಕೊಟ್ಟಿದ್ದನಂತೆ ನಿಜ್ಜರ್‌; ಖಲಿಸ್ತಾನಿ ಉಗ್ರನ ಬಗ್ಗೆ ಮತ್ತಷ್ಟು ಭೀಕರ ಸಂಗತಿ ಬಯಲು

Sleep After Lunch
ಲೈಫ್‌ಸ್ಟೈಲ್1 hour ago

Sleep After Lunch: ಊಟದ ನಂತರ ನಮಗೆ ಆಕಳಿಕೆ, ನಿದ್ದೆ ಬರುವುದೇಕೆ?

R Ashok demands that the Congress apologize for imposing emergency
ಕರ್ನಾಟಕ1 hour ago

R Ashok: ತುರ್ತು ಪರಿಸ್ಥಿತಿ ಹೇರಿದ ಕಾಂಗ್ರೆಸ್‌ ಕ್ಷಮೆ ಕೋರಲಿ, ರಾಹುಲ್‌ ಗಾಂಧಿ ತಲೆಬಾಗಲಿ; ಆರ್‌. ಅಶೋಕ್‌

Viral Video
Latest1 hour ago

Viral Video: ರೀಲ್ಸ್ ಮಾಡಲು ಹೋದ ವಿದ್ಯಾರ್ಥಿನಿಗೆ ಕೊನೆಗೆ ಆಗಿದ್ದೇನು? ವಿಡಿಯೊ ನೋಡಿ

JP Nadda
ದೇಶ1 hour ago

JP Nadda: ರಾಜ್ಯಸಭೆ ಸದನ ನಾಯಕರಾಗಿ ಜೆ.ಪಿ. ನಡ್ಡಾ ಆಯ್ಕೆ; ಪಿಯೂಷ್‌ ಗೋಯಲ್‌ ಬದಲು ನೇಮಕ

Sharmitha Gowda in bikini
ಕಿರುತೆರೆ9 months ago

Geetha Serial Kannada: ನಿದ್ದೆ ಕದ್ದ ಚೋರಿ! ನಟಿ `ಭಾನುಮತಿ’ ಹಾಟ್‌ ಪೋಟೊಗಳಿಗೆ ಫ್ಯಾನ್ಸ್ ಫುಲ್ ಫಿದಾ

Kannada Serials
ಕಿರುತೆರೆ9 months ago

Kannada Serials TRP: 2ನೇ ಸ್ಥಾನದಲ್ಲಿ 2 ಧಾರಾವಾಹಿಗಳು; ಟಿಆರ್‌ಪಿ ರೇಸ್‌ನಲ್ಲಿಲ್ಲ ಭಾಗ್ಯಲಕ್ಷ್ಮೀ!

Bigg Boss- Saregamapa 20 average TRP
ಕಿರುತೆರೆ8 months ago

Kannada Serials TRP: ಏಳನೇ ಸ್ಥಾನಕ್ಕೆ ʻಅಮೃತಧಾರೆʼ ಕುಸಿತ; ಬಿಗ್‌ ಬಾಸ್‌-ಸರಿಗಮಪ ಟಿಆರ್‌ಪಿ ಎಷ್ಟು?

galipata neetu
ಕಿರುತೆರೆ7 months ago

Kanyadana Serial: ಕಿರುತೆರೆಗೆ ಮತ್ತೆ ಎಂಟ್ರಿ ಕೊಟ್ಟ ʻಗಾಳಿಪಟʼ ಖ್ಯಾತಿಯ ʻನೀತುʼ!

Kannada Serials
ಕಿರುತೆರೆ9 months ago

Kannada Serials TRP: ನಾಲ್ಕನೇ ಸ್ಥಾನಕ್ಕೆ ಕುಸಿತ ಕಂಡ ʻಸೀತಾ ರಾಮʼ; ಟಿಆರ್‌ಪಿ ರೇಸ್‌ಗೆ ʻಭಾಗ್ಯಲಕ್ಷ್ಮಿʼ ಬ್ಯಾಕ್‌!

Kannada Serials
ಕಿರುತೆರೆ9 months ago

Kannada Serials TRP: ಟಿಆರ್‌ಪಿಯಲ್ಲಿ ʻಭಾಗ್ಯಲಕ್ಷ್ಮೀʼ ಹವಾ; ʻಪುಟ್ಟಕ್ಕನ ಮಕ್ಕಳುʼ ಧಾರಾವಾಹಿಗೆ ಸಂಕಷ್ಟ!

Bigg Boss' dominates TRP; Sita Rama fell to the sixth position
ಕಿರುತೆರೆ8 months ago

Kannada Serials TRP: ಟಿಆರ್‌ಪಿಯಲ್ಲಿ ʻಬಿಗ್ ಬಾಸ್ʼದೇ ಮೇಲುಗೈ; 6ನೇ ಸ್ಥಾನಕ್ಕೆ ಕುಸಿದ ʻಸೀತಾ ರಾಮʼ

geetha serial Dhanush gowda engagement
ಕಿರುತೆರೆ6 months ago

Dhanush Gowda: ಗೀತಾ ಧಾರಾವಾಹಿ ನಟನ ನಿಶ್ಚಿತಾರ್ಥ; ಭವ್ಯಾಳ ಕಮೆಂಟ್‌ ಬಾಕ್ಸ್‌ ಆಫ್‌!

varun
ಕಿರುತೆರೆ7 months ago

Brindavana Serial: ʼಬೃಂದಾವನʼ ಧಾರಾವಾಹಿಯಲ್ಲಿ ದೊಡ್ಡ ಟ್ವಿಸ್ಟ್‌; ಪ್ರಮುಖ ಪಾತ್ರಧಾರಿಯೇ ಬದಲು

Kannada Serials
ಕಿರುತೆರೆ9 months ago

Kannada Serials TRP: ಟಿಆರ್‌ಪಿಯಲ್ಲಿ ಏರಿಕೆ ಕಂಡ ʻಅಮೃತಧಾರೆʼ; ʻಗಟ್ಟಿಮೇಳʼಕ್ಕೆ ನಾಲ್ಕನೇ ಸ್ಥಾನ!

karnataka weather Forecast
ಮಳೆ3 days ago

Karnataka Weather : ರಭಸವಾಗಿ ಹರಿಯುವ ನೀರಲ್ಲಿ ಸಿಲುಕಿದ ಬೊಲೆರೋ; ಬಿರುಗಾಳಿ ಸಹಿತ ಮಳೆ ಎಚ್ಚರಿಕೆ

International Yoga Day 2024
ಕರ್ನಾಟಕ3 days ago

International Yoga Day 2024: ಎಲ್ಲೆಲ್ಲೂ ಯೋಗಾಯೋಗ‌ಕ್ಕೆ ಮಂಡಿಯೂರಿದ ಜನತೆ

Karnataka Weather Forecast
ಮಳೆ4 days ago

Karnataka Weather : ಬಾಗಲಕೋಟೆ, ಬೆಂಗಳೂರು ಸೇರಿ ಚಿಕ್ಕಮಗಳೂರಲ್ಲಿ ಸುರಿದ ಗಾಳಿ ಸಹಿತ ಮಳೆ

Actor Darshan
ಮೈಸೂರು1 week ago

Actor Darshan : ಕೊಲೆ ಕೇಸ್‌ ಬೆನ್ನಲ್ಲೇ ನಟ ದರ್ಶನ್‌ ಸೇರಿ ಪತ್ನಿ ವಿಜಯಲಕ್ಷ್ಮಿಗೆ ಬಾರ್ ಹೆಡೆಡ್ ಗೂಸ್ ಸಂಕಷ್ಟ!

Bakrid 2024
ಬೆಂಗಳೂರು1 week ago

Bakrid 2024 : ಮತ್ತೊಂದು ಧರ್ಮವನ್ನೂ ಪ್ರೀತಿಸಿ; ಬಕ್ರೀದ್‌ ಪ್ರಾರ್ಥನೆಯಲ್ಲಿ ಸಿಎಂ ಸಿದ್ದರಾಮಯ್ಯ ಕರೆ

Renukaswamy murder case The location of the accused is complete
ಸಿನಿಮಾ1 week ago

Renuka Swamy murder : ಭೀಕರವಾಗಿ ಕೊಂದರೂ ಆರೋಪಿಗಳಿಗೆ ಕಾಡುತ್ತಿಲ್ವಾ ಪಾಪಪ್ರಜ್ಞೆ? ನಗುತ್ತಲೇ ಹೊರಬಂದ ಪವಿತ್ರಾ ಗೌಡ, ಪವನ್‌

Renuka swamy murder
ಚಿತ್ರದುರ್ಗ1 week ago

Renuka swamy Murder : ರೇಣುಕಾಸ್ವಾಮಿ ಕುಟುಂಬಸ್ಥರಿಗೆ ಸಾಂತ್ವನ ಹೇಳಿದ ಬಾಳೆಹೊನ್ನೂರು ಶ್ರೀಗಳು

Vijayanagara News
ವಿಜಯನಗರ1 week ago

Vijayanagara News : ಕೆಲಸಕ್ಕೆ ಚಕ್ಕರ್, ಸಂಬಳಕ್ಕೆ ಹಾಜರ್! ಹಾರಕನಾಳು ಗ್ರಾಪಂ ಪಿಡಿಓಗಾಗಿ ಗ್ರಾಮಸ್ಥರ ಹುಡುಕಾಟ

Actor Darshan
ಯಾದಗಿರಿ1 week ago

Actor Darshan : ಬಾಸ್‌ ಅಂತ ಯಾಕ್‌ ಬಕೆಟ್‌ ಹಿಡಿಯುತ್ತೀರಾ ಅಂದವನಿಗೆ ದರ್ಶನ್ ಅಭಿಮಾನಿಯಿಂದ ಜೀವ ಬೆದರಿಕೆ!

Karnataka Weather Forecast
ಮಳೆ1 week ago

Karnataka Weather : ಕರಾವಳಿ, ಉತ್ತರ ಒಳನಾಡಿನಲ್ಲಿ ವರುಣಾರ್ಭಟ; ನಾಳೆಯು ಹಲವೆಡೆ ಸಿಕ್ಕಾಪಟ್ಟೆ ಮಳೆ

ಟ್ರೆಂಡಿಂಗ್‌