ಫೇಸ್‌ಬುಕ್‌ ಸ್ಥಾಪಕ ಜುಕರ್‌ಬರ್ಗ್‌ ಮನೆ 245 ಕೋಟಿ ರೂ.ಗೆ ಮಾರಾಟ - Vistara News

ವಾಣಿಜ್ಯ

ಫೇಸ್‌ಬುಕ್‌ ಸ್ಥಾಪಕ ಜುಕರ್‌ಬರ್ಗ್‌ ಮನೆ 245 ಕೋಟಿ ರೂ.ಗೆ ಮಾರಾಟ

ಫೇಸ್‌ಬುಕ್‌ ಸಂಸ್ಥಾಪಕ ಮಾರ್ಕ್‌ ಜುಕರ್‌ಬರ್ಗ್‌, ಸ್ಯಾನ್‌ ಫ್ರಾನ್ಸಿಸ್ಕೊದಲ್ಲಿನ ಬಂಗಲೆಯನ್ನು ಮಾರಾಟ ಮಾಡಿದ್ದಾರೆ. ಅಮೆರಿಕದ ಪಶ್ಚಿಮ ಕರಾವಳಿಯ ನಗರಗಳಲ್ಲಿ ಹಲವಾರು ಮನೆಗಳನ್ನು ಅವರು ಹೊಂದಿದ್ದಾರೆ.

VISTARANEWS.COM


on

zukerberg
ಮಹತ್ವದ, ಕುತೂಹಲಕರ ಸುದ್ದಿಗಾಗಿ ಫಾಲೊ ಮಾಡಿ
Koo

ಸ್ಯಾನ್‌ ಫ್ರಾನ್ಸಿಸ್ಕೊ: ಫೇಸ್‌ಬುಕ್‌ ಸ್ಥಾಪಕ ಜುಕರ್‌ಬರ್ಗ್‌ ಅವರು ಅಮೆರಿಕದ ಸ್ಯಾನ್‌ ಫ್ರಾನ್ಸಿಸ್ಕೊದಲ್ಲಿರುವ ತಮ್ಮ ಮನೆಯನ್ನು ೩೧ ದಶಲಕ್ಷ ಡಾಲರ್‌ಗೆ (ಅಂದಾಜು ೨೪೫ ಕೋಟಿ ರೂ.) ಮಾರಾಟ ಮಾಡಿದ್ದಾರೆ.

ಅಮೆರಿಕದ ಪಶ್ಚಿಮ ಕರಾವಳಿಯ ನಗರಗಳಲ್ಲಿ ಹಲವಾರು ಮನೆಗಳನ್ನು ಹೊಂದಿರುವ ಮಾರ್ಕ್‌ ಜುಕರ್‌ಬರ್ಗ್‌, ಸ್ಯಾನ್‌ ಫ್ರಾನ್ಸಿಸ್ಕೊದಲ್ಲಿನ ಮನೆಯನ್ನು ಮಾರಾಟ ಮಾಡಿದ್ದಾರೆ ಎಂದು ವರದಿಯಾಗಿದೆ. ೨೦೧೨ರಲ್ಲಿ ೧೦ ದಶಲಕ್ಷ ಡಾಲರ್‌ಗೆ (೧ ಕೋಟಿ ರೂ.) ಅವರು ೭,೦೦೦ ಚದರ ಅಡಿ ವಿಸ್ತೀರ್ಣದ ಈ ಆಸ್ತಿಯನ್ನು ಜುಕರ್‌ಬರ್ಗ್ ಖರೀದಿಸಿದ್ದರು.‌

೨೦೧೨ರಲ್ಲಿ ಫೇಸ್‌ಬುಕ್ ಐಪಿಒ ನಡೆದ ಬಳಿಕ ಈ ಬಂಗಲೆಯನ್ನು ಜುಕರ್‌ ಬರ್ಗ್‌ ಖರೀದಿಸಿದ್ದರು. ಬಳಿಕ ಮನೆಯ ನವೀಕರಣವೂ ನಡೆದಿತ್ತು. ಸ್ಯಾನ್‌ ಫ್ರಾನ್ಸಿಸ್ಕೊದಲ್ಲಿ ಈ ವರ್ಷ ಇದುವರೆಗೆ ನಡೆದಿರುವ ಅತಿ ದುಬಾರಿ ಮನೆ ಮಾರಾಟ ಇದಾಗಿದೆ.

ಮನೆ ಮಾರಾಟ ಮಾಡಿದ್ದೇಕೆ? ಇದಕ್ಕೆ ಕಾರಣ ಸ್ಪಷ್ಟವಾಗಿಲ್ಲ. ಆದರೆ ಮನೆಯ ನವೀಕರಣ ಮಾಡುತ್ತಿದ್ದ ಸಂದರ್ಭ ನೆರೆಹೊರೆಯ ನಿವಾಸಿಗಳು ಶಬ್ದ, ಧೂಳು, ಮಾಲಿನ್ಯ ಉಂಟಾಗುತ್ತಿದೆ ಎಂದು ದೂರಿದ್ದರು. ನವೀಕರಣ ಆದ ಬಳಿಕ ಕೂಡ ಜುಕರ್‌ಬರ್ಗ್‌ ಅವರ ಭದ್ರತಾ ಸಿಬ್ಬಂದಿ ಪಾರ್ಕಿಂಗ್‌ ಸ್ಥಳವನ್ನು ದುರ್ಬಳಕೆ ಮಾಡುತ್ತಿದ್ದಾರೆ ಎಂದು ಆರೋಪಿಸಿದ್ದರು.

ಕ್ಷಣ ಕ್ಷಣದ ಮಾಹಿತಿಗಾಗಿ Vistara News FaceBook ಪೇಜ್ ಫಾಲೋ ಮಾಡಿ
ಮಹತ್ವದ ಮಾಹಿತಿಗಾಗಿ ವಿಸ್ತಾರ ನ್ಯೂಸ್ ಆ್ಯಪ್ ಉಚಿತವಾಗಿ ಡೌನ್ ಲೋಡ್ ಮಾಡಿಕೊಳ್ಳಿ: Andriod App | IOS App
Continue Reading
Click to comment

Leave a Reply

Your email address will not be published. Required fields are marked *

ಮನಿ-ಗೈಡ್

Money Guide: 1 ಕೋಟಿ ರೂ. ದುಡಿಯಬೇಕೆ? ಈ ಅಪಾಯ ರಹಿತ ಯೋಜನೆಯಲ್ಲಿ ಹೂಡಿಕೆ ಮಾಡಿ

Money Guide: ಭವಿಷ್ಯಕ್ಕಾಗಿ ಹೂಡಿಕೆ ಮಾಡಬೇಕು ಎನ್ನುವುದು ಬಹುತೇಕರ ಆಗ್ರಹ. ಆದರೆ ಯಾವ ಯೋಜನೆಯಲ್ಲಿ ಹೂಡಿಕೆ ಮಾಡಿದರೆ ಉತ್ತಮ ಎನ್ನವ ಬಗ್ಗೆ ಗೊಂದಲ ಮೂಡುತ್ತದೆ. ಇಲ್ಲಿ ನಾವು ನಿಮಗೆ ಪರಿಚಯಿಸುವ ಯೋಜನೆ ಸರ್ಕಾರಿ ಬೆಂಬಲಿತ ಪ್ಲಾನ್‌ ಆಗಿದ್ದು, ಇಲ್ಲಿ ಹೂಡಿಕೆ ಮಾಡುವುದರಿಂದ ಯಾವುದೇ ಆತಂಕವಿಲ್ಲ. ಈ ಯೋಜನೆಯಲ್ಲಿ ಹೂಡಿಕೆ ಮಾಡುವ ಮೂಲಕ ನೀವು 1 ಕೋಟಿ ರೂ.ಗಿಂತ ಹೆಚ್ಚು ಸಂಗ್ರಹಿಸಬಹುದು. ಹಾಗಾದರೆ ಇದು ಯಾವ ಯೋಜನೆ? ಯಾರೆಲ್ಲ ಹೂಡಿಕೆ ಮಾಡಬಹುದು? ನಿಮ್ಮ ಪ್ರಶ್ನೆಗೆ ಇಲ್ಲಿದೆ ಉತ್ತರ.

VISTARANEWS.COM


on

Money Guide
Koo

ಬೆಂಗಳೂರು: ದಿನದಿಂದ ದಿನಕ್ಕೆ ಹೆಚ್ಚುತ್ತಿರುವ ಬೆಲೆ, ದುಬಾರಿ ಜೀವನ ಶೈಲಿಯಿಂದಾಗಿ ಹಣಕಾಸಿನ ವಿಚಾರದಲ್ಲಿ ಎಲ್ಲರೂ ಎಚ್ಚರಿಕೆ ವಹಿಸಲೇಬೇಕಾದ ಅನಿವಾರ್ಯತೆ ಎದುರಾಗಿದೆ. ಹೀಗಾಗಿ ಪ್ರತಿಯೊಬ್ಬರೂ ಉಳಿತಾಯ ಮಾಡುವತ್ತ ಗಮನ ಹರಿಸಬೇಕು ಎನ್ನುವುದು ಆರ್ಥಿಕ ತಜ್ಞರ ಸಲಹೆ. ಹಾಗಾದರೆ ಉಳಿತಾಯ, ನಿವೃತ್ತಿ ಯೋಜನೆಗಳಲ್ಲಿ ಹೂಡಿಕೆ ಮಾಡುವುದಾದರೆ ಯಾವುದು ಉತ್ತಮ? ಎನ್ನುವ ಪ್ರಶ್ನೆ ಸಹಜವಾಗಿ ಎದುರಾಗುತ್ತದೆ. ಇದಕ್ಕೆ ತಜ್ಞರು ನೀಡುವ ಉತ್ತರ ಸಾರ್ವಜನಿಕ ಭವಿಷ್ಯ ನಿಧಿ (Public Provident Fund). ಇದು ಕೇಂದ್ರ ಸರ್ಕಾರ ಬೆಂಬಲಿತ ಪ್ಲಾನ್‌ ಆಗಿದ್ದು, ಸಣ್ಣ ಹೂಡಿಕೆದಾರರು ಈ ಯೋಜನೆಯನ್ನು ಆಯ್ಕೆ ಮಾಡಿಕೊಳ್ಳಬಹುದು. ಸರ್ಕಾರಿ ಬೆಂಬಲಿತ ಪ್ಲಾನ್‌ ಆದ ಕಾರಣ ಇಲ್ಲಿ ಹೂಡಿಕೆ ಮಾಡುವುದು ಅಪಾಯಕಾರಿ ಅಲ್ಲ ಎನ್ನುವುದು ಬಹು ದೊಡ್ಡ ಪ್ಲಸ್‌ ಪಾಯಿಂಟ್‌. ಪಿಪಿಎಫ್‌ ಖಾತೆ ತೆರೆಯುವವರಿಗೆ ವಾರ್ಷಿಕ ಶೇ. 7.1ರಷ್ಟು ಬಡ್ಡಿ ದೊರೆಯಲಿದೆ. ಅಲ್ಲದೆ ಈ ಹೂಡಿಕೆಯ ಮೂಲಕ ಸಾಲವನ್ನೂ ಪಡೆಯಬಹುದು. ಜತೆಗೆ ತೆರಿಗೆ ವಿನಾಯಿತಿಯೂ ಲಭಿಸುತ್ತದೆ. ವಿಶೇಷ ಎಂದರೆ ನಿಯತಕಾಲಿಕ ಹೂಡಿಕೆಗಳು ಮತ್ತು ಸಂಯೋಜನೆಯ ಮೂಲಕ ನೀವು ಪಿಪಿಎಫ್‌ನಿಂದ 1 ಕೋಟಿ ರೂ.ಗಿಂತ ಹೆಚ್ಚಿನ ಹಣವನ್ನು ಸಂಗ್ರಹಿಸಬಹುದು. ಅದು ಹೇಗೆ ಎನ್ನುವ ವಿವರ ಇಲ್ಲಿದೆ (Money Guide).

1 ಕೋಟಿ ರೂ. ಪಡೆಯುವ ವಿಧಾನ

ಹೂಡಿಕೆ ಅವಧಿಒಟ್ಟು ಪಿಪಿಎಫ್‌
ಹೂಡಿಕೆ
ಒಟ್ಟು ಬಡ್ಡಿಮೆಚ್ಯೂರಿಟಿ ಮೊತ್ತ
15 ವರ್ಷ1.5 ಲಕ್ಷ ರೂ.18.18 ಲಕ್ಷ ರೂ.40.68 ಲಕ್ಷ ರೂ.
20 ವರ್ಷ1.5 ಲಕ್ಷ ರೂ.36.58 ಲಕ್ಷ ರೂ.66.58 ಲಕ್ಷ ರೂ.
30 ವರ್ಷ1.5 ಲಕ್ಷ ರೂ.1.09 ಕೋಟಿ ರೂ.1.54 ಕೋಟಿ ರೂ.

ವಿವಿಧ ಅವಧಿಗಳಲ್ಲಿ ವಾರ್ಷಿಕವಾಗಿ 1.5 ಲಕ್ಷ ರೂ. ಹೂಡಿಕೆ ಮಾಡುವ ಮೂಲಕ ನಿಮ್ಮ ಮೆಚ್ಯೂರಿಟಿ ಮೊತ್ತವು 40 ಲಕ್ಷ ರೂ.ಯಿಂದ 1.5 ಕೋಟಿ ರೂ.ಗೆ ಹೇಗೆ ಬೆಳೆಯಬಹುದು ಎಂಬುದನ್ನು ಮೇಲಿನ ಉದಾಹರಣೆ ವಿವರಿಸುತ್ತದೆ.

ತೆರಿಗೆ ವಿನಾಯಿತಿ

ಇನ್ನು ಸೆಕ್ಷನ್‌ 80 ಸಿ ಅಡಿಯಲ್ಲಿ 1.5 ಲಕ್ಷ ರೂ. ತನಕ ತೆರಿಗೆ ವಿನಾಯಿತಿ ಸಿಗಲಿದೆ. ಅಂದರೆ ಯೋಜನೆಯಲ್ಲಿ ಮಾಡಿದ ಸಂಪೂರ್ಣ ಹೂಡಿಕೆಯ ಮೇಲೆ ತೆರಿಗೆ ವಿನಾಯಿತಿಯ ಪ್ರಯೋಜನವನ್ನು ನೀವು ಪಡೆಯುತ್ತೀರಿ. ಇದಲ್ಲದೆ, ಹೂಡಿಕೆಯಿಂದ ಪಡೆದ ಬಡ್ಡಿಗೂ ಯಾವುದೇ ತೆರಿಗೆ ಪಾವತಿಸಬೇಕಾಗಿಲ್ಲ. ಅಲ್ಲದೆ ಯೋಜನೆ ಮುಕ್ತಾಯವಾದ ಬಳಿಕ ಪಡೆದಯುವ ಮೊತ್ತವೂ ತೆರಿಗೆಮುಕ್ತವಾಗಿರುತ್ತದೆ.

ಸಾಲ ಪಡೆಯಲಿರುವ ಅರ್ಹತೆ

ಪಬ್ಲಿಕ್‌ ಪ್ರಾವಿಡೆಂಟ್‌ ಫಂಡ್‌ನಲ್ಲಿ ನೀವು ಮಾಡುವ ಇನ್ವೆಸ್ಟ್‌ಮೆಂಟ್‌ ಮೇಲೆ ಸಾಲ ಪಡೆಯಬಹುದು. ಖಾತೆ ತೆರೆದ 3-6ನೇ ವರ್ಷದಲ್ಲಿ ಸಾಲ ಪಡೆಯಲು ನೀವು ಅರ್ಹರಾಗಿರುತ್ತೀರಿ. ಇಂಥ ಸಾಲದ ಗರಿಷ್ಠ ಅವಧಿ 36 ತಿಂಗಳು. ಅಕೌಂಟ್‌ನಲ್ಲಿರುವ ಮೊತ್ತದ 25% ಅಥವಾ ಕಡಿಮೆ ಮೊತ್ತವನ್ನು ಮಾತ್ರ ಸಾಲಕ್ಕಾಗಿ ಕ್ಲೈಮ್‌ ಮಾಡಿಕೊಳ್ಳಬಹುದು.‌

ಯಾರೆಲ್ಲ ತೆರೆಯಬಹುದು?

ಭಾರತೀಯ ನಾಗರಿಕರು ಪಿಪಿಎಫ್‌ ಖಾತೆಯನ್ನು ತೆರೆಯಬಹುದು. ಅಪ್ರಾಪ್ತ ವಯಸ್ಕರ ಹೆಸರಿನಲ್ಲಿಯೂ ಖಾತೆ ತೆರೆಯುವ ಸೌಕರ್ಯವಿದೆ. ಅನಿವಾಸಿ ಭಾರತೀಯರು ಹೊಸ ಪಿಪಿಎಫ್‌ ಅಕೌಂಟ್‌ ತೆರೆಯುವಂತಿಲ್ಲ. ಹೀಗಿದ್ದರೂ ಈಗಾಗಲೇ ಇದ್ದರೆ ಅದು ಪೂರ್ಣವಾಗುವ ತನಕ ಸಕ್ರಿಯವಾಗಿರುತ್ತದೆ. ಆದರೆ 5 ವರ್ಷಗಳ ಹೆಚ್ಚುವರಿ ಅವಧಿ ಇರುವುದಿಲ್ಲ. ಈ ಯೋಜನೆಯಲ್ಲಿ ನೀವು ವರ್ಷಕ್ಕೆ ಕನಿಷ್ಠ 500 ರೂ ಮತ್ತು ಗರಿಷ್ಠ 1.5 ಲಕ್ಷ ರೂ.ಗಳನ್ನು ಹೂಡಿಕೆ ಮಾಡಬಹುದು. ಒಂದು ಹಣಕಾಸು ವರ್ಷದಲ್ಲಿ ನೀವು ಗರಿಷ್ಠ 12 ಕಂತುಗಳಲ್ಲಿ ಹಣವನ್ನು ಠೇವಣಿ ಇಡುವ ಸೌಲಭ್ಯವೂ ಇದೆ. ಆಫ್‌ಲೈನ್‌ ಹಾಗೂ ಆನ್‌ಲೈನ್‌ ವಿಧಾನದಲ್ಲಿ ಪಿಪಿಎಫ್‌ ಖಾತೆಯನ್ನು ತೆರೆಯಬಹುದು. 

ಇದನ್ನೂ ಓದಿ: Money Guide: ತೆರಿಗೆ ವಿನಾಯಿತಿ ಪಡೆಯಬೇಕೆ? ಮಾ. 31ರೊಳಗೆ ಪಿಪಿಎಫ್‌ನಲ್ಲಿ ಹೂಡಿಕೆ ಮಾಡಿ

Continue Reading

ವಾಣಿಜ್ಯ

Highest Paid CEO: ವಿಪ್ರೊ ಮಾಜಿ ಸಿಇಒ ವಾರ್ಷಿಕ ಸಂಬಳ 166 ಕೋಟಿ ರೂ! ಉಳಿದ ಸಿಇಒಗಳಿಗೆ ಎಷ್ಟು?

Highest Paid CEO: 2024ರ ಹಣಕಾಸು ವರ್ಷದಲ್ಲಿ ಅತ್ಯಧಿಕ ಸಂಭಾವನೆ ಪಡೆದ ಐಟಿ ಸಿಇಒ ವಿಪ್ರೊದ ಥಿಯೆರ್ರಿ ಡೆಲಾಪೋರ್ಟೆ ಅವರು ಏಪ್ರಿಲ್ 6ರಂದು ರಾಜೀನಾಮೆ ನೀಡಿದ್ದಾರೆ. ಅವರ ಸ್ಥಾನಕ್ಕೆ 32 ವರ್ಷಗಳ ಕಾಲ ಅನುಭವಿ ಶ್ರೀನಿವಾಸ್ ಪಾಲ್ಲಿಯಾ ಅವರನ್ನು
ನೇಮಿಸಲಾಗಿದೆ. ಬೃಹತ್‌ ಐಟಿ ಕಂಪನಿಗಳ ಸಿಇಒಗಳು ಹೆಚ್ಚು ಸಂಬಳ ಪಡೆಯುತ್ತಾರೆ? ಇಲ್ಲಿದೆ ಮಾಹಿತಿ.

VISTARANEWS.COM


on

By

Highest Paid CEO
Koo

ವಿಪ್ರೋದ (Wipro) ಮಾಜಿ ಸಿಇಒ (ex-ceo) ಮತ್ತು ಆಡಳಿತ ನಿರ್ದೇಶಕ ಥಿಯೆರ್ರಿ ಡೆಲಾಪೋರ್ಟೆ (Thierry Delaporte) ಅವರು 20 ಮಿಲಿಯನ್ ಡಾಲರ್ ಅಂದರೆ ಸರಿಸುಮಾರು 166 ಕೋಟಿ ರೂ. ಗಳಿಸಿ ಸತತ ಎರಡನೇ ವರ್ಷ ಐಟಿ ಉದ್ಯಮದಲ್ಲಿ ಅತಿ ಹೆಚ್ಚು ಸಂಭಾವನೆ (Highest Paid CEO) ಪಡೆಯುವ ಸಿಇಒ ಎಂಬ ಹೆಗ್ಗಳಿಕೆಗೆ ಪಾತ್ರರಾಗಿದ್ದಾರೆ.

ಥಿಯೆರಿ ಡೆಲಾಪೋರ್ಟೆ ಅವರು ಏಪ್ರಿಲ್‌ 6ರಂದು ಕಂಪನಿಗೆ ರಾಜೀನಾಮೆ ನೀಡಿದ್ದು, ಅವರ ಸ್ಥಾನಕ್ಕೆ ಕಂಪನಿಯು 32 ವರ್ಷಗಳ ಕಾಲ ಅನುಭವ ಹೊಂದಿರುವ ಶ್ರೀನಿವಾಸ್ ಪಾಲ್ಲಿಯಾ ಅವರನ್ನು ನೇಮಕ ಮಾಡಿದೆ. ಯುಎಸ್ ಸೆಕ್ಯುರಿಟೀಸ್ ಆಂಡ್ ಎಕ್ಸ್‌ಚೇಂಜ್ ಕಮಿಷನ್‌ಗೆ ವಿಪ್ರೊ ಸಲ್ಲಿಸಿರುವ 20 ಎಫ್ ಫೈಲಿಂಗ್‌ಗಳ ಪ್ರಕಾರ ಡೆಲಾಪೋರ್ಟೆ 3.9 ಮಿಲಿಯನ್‌ ಡಾಲರ್ ಗಿಂತಲೂ ಹೆಚ್ಚು ಸಂಬಳ ಮತ್ತು ಭತ್ಯೆ, 5 ಮಿಲಿಯನ್‌ ಡಾಲರ್ ಗಿಂತಲೂ ಹೆಚ್ಚು ಕಮಿಷನ್/ ವೇರಿಯಬಲ್ ಪೇ, ಸುಮಾರು 7 ಮಿಲಿಯನ್ ಡಾಲರ್ ಇತರ ಮತ್ತು 4 ಮಿಲಿಯನ್‌ ಡಾಲರ್ ಗಿಂತಲೂ ಹೆಚ್ಚು ದೀರ್ಘಾವಧಿಯ ಪರಿಹಾರವನ್ನು ಗಳಿಸಿದ್ದಾರೆ.

ಶ್ರೀನಿವಾಸ್ ಪಲ್ಲಿಯಾ ಅವರು ಸುಮಾರು 50 ಕೋಟಿ ರೂಪಾಯಿಗಳ ವಾರ್ಷಿಕ ಸಂಭಾವನೆ ಪ್ಯಾಕೇಜ್‌ ಸ್ವೀಕರಿಸಿದ್ದಾರೆ. ಇದರಿಂದ ಅವರು ಆರ್ಥಿಕ ವರ್ಷ 2025ರಲ್ಲಿ ಭಾರತೀಯ ಮಾಹಿತಿ ತಂತ್ರಜ್ಞಾನ ಉದ್ಯಮದಲ್ಲಿ ಅತಿ ಹೆಚ್ಚು ಸಂಭಾವನೆ ಪಡೆಯುವ ಎರಡನೇ ಸಿಇಒ ಆಗಿದ್ದಾರೆ. ಕಂಪನಿಯ ಆದಾಯವು ಇಳಿಮುಖವಾಗುತ್ತಿರುವ ಹೊತ್ತಲ್ಲಿ ಹೊಸ ಸಿಇಒ ನೇಮಕ ವೇತನದ ನಡುವಿನ ಅಸಮಾನತೆಯನ್ನು ಹೆಚ್ಚಿಸಿದೆ. ಸಿಇಒ ವೇತನವು ಸತತ ಎರಡನೇ ವರ್ಷಕ್ಕೆ ಹೆಚ್ಚಾಗಿದೆ.

ಮತ್ತೊಂದೆಡೆ ವಿಪ್ರೋ ಕಾರ್ಯನಿರ್ವಾಹಕ ಅಧ್ಯಕ್ಷ ರಿಶಾದ್ ಪ್ರೇಮ್‌ಜಿ ಅವರು ಹೆಚ್ಚುತ್ತಿರುವ ಏಕೀಕೃತ ನಿವ್ವಳ ಲಾಭದ ಮೇಲೆ ಶೇ. 0.35ರಷ್ಟು ಕಮಿಷನ್‌ಗೆ ಅರ್ಹರಾಗಿದ್ದಾರೆ. ಕಂಪನಿಯ ಹಣಕಾಸಿನ ವರ್ಷದಲ್ಲಿ ನಷ್ಟವನ್ನು ಅನುಭವಿಸಿದ ಕಾರಣ ಅದನ್ನು ತಡೆಹಿಡಿಯಲಾಗಿದೆ.

ಕಂಪನಿಯ ಆದಾಯ ಇಳಿಕೆ

ಆರ್ಥಿಕ ವರ್ಷ 2024ರ ಪೂರ್ಣ ವರ್ಷದಲ್ಲಿ ವಿಪ್ರೋ ಆದಾಯವು ವರ್ಷಕ್ಕೆ 90,486 ಕೋಟಿಗಳಿಂದ 89,760 ಕೋಟಿಗೆ ಇಳಿದಿದೆ.

ಅತಿ ಹೆಚ್ಚು ವಾರ್ಷಿಕ ಸಂಭಾವನೆ

2023- 24ರ ಹಣಕಾಸು ವರ್ಷದಲ್ಲಿ ಇನ್ಫೋಸಿಸ್ ಸಿಇಒ ಸಲೀಲ್ ಪರೇಖ್ ಅವರು ವಾರ್ಷಿಕ ಸಂಭಾವನೆ ಪ್ಯಾಕೇಜ್‌ನಲ್ಲಿ 56 ಕೋಟಿ ರೂ. ಆಗಿದೆ. ಎಚ್‌ಸಿಎಲ್‌ಟೆಕ್‌ನ ಸಿ ವಿಜಯಕುಮಾರ್, 28.4 ಕೋಟಿ ರೂ. ಗಳಿಸಿದ್ದಾರೆ. L&T ಮತ್ತು Mindtree ವಿಲೀನದ ಅನಂತರ ನವೆಂಬರ್ 2022 ರಲ್ಲಿ ಚುಕ್ಕಾಣಿ ಹಿಡಿದ ಅದರ ಸಿಇಒ ದೇಬಾಶಿಸ್ ಚಟರ್ಜಿ ಆರ್ಥಿಕ ವರ್ಷ 22-23ರಲ್ಲಿ 17.5 ಕೋಟಿ ರೂ. ಗಳಿಸಿದ್ದಾರೆ.

ಇದನ್ನೂ ಓದಿ: Money Guide: ಉಮಂಗ್ ಆ್ಯಪ್‌ ಮೂಲಕ ಪಿಎಫ್‌ ಮೊತ್ತ ಹೀಗೆ ವಿತ್‌ಡ್ರಾ ಮಾಡಬಹುದು

ಟೆಕ್ ಮಹೀಂದ್ರಾದ ಮೋಹಿತ್ ಜೋಶಿ ಅವರು ವಾರ್ಷಿಕವಾಗಿ 6.5 ಕೋಟಿ ರೂಪಾಯಿಗಳ ವೇತನ ಪಡೆಯುತ್ತಾರೆ. ಟಾಟಾ ಕನ್ಸಲ್ಟೆನ್ಸಿ ಸರ್ವಿಸಸ್ (ಟಿಸಿಎಸ್) ಸಿಇಒ ಮತ್ತು ಎಂಡಿ ಕೆ. ಕೃತಿವಾಸನ್ ಅವರು 2024ರಲ್ಲಿ ವಾರ್ಷಿಕ ಪರಿಹಾರದಲ್ಲಿ 25.36 ಕೋಟಿ ರೂ. ಗಳನ್ನು ಪಡೆದರು.

2024ರ ಮಾರ್ಚ್ 31ಕ್ಕೆ ಕೊನೆಗೊಂಡ ವರ್ಷಕ್ಕೆ ಡೆಲಾಪೋರ್ಟೆ ಅವರಿಗೆ ನೀಡಿದ ಪರಿಹಾರವು 9,89,130 ಅನ್ವೆಸ್ಟೆಡ್ ಸ್ಟಾಕ್ ಆಯ್ಕೆ ಮತ್ತು 4.33 ಮಿಲಿಯನ್ ಡಾಲರ್ ಮೊತ್ತದ ನಗದು ಪರಿಹಾರವನ್ನು ಒಳಗೊಂಡಿದೆ.

Continue Reading

ದೇಶ

Share Market: ದಾಖಲೆ ಬರೆದ ನಿಫ್ಟಿ, ಸೆನ್ಸೆಕ್ಸ್‌ ಭರ್ಜರಿ ನೆಗೆತ; ಹೂಡಿಕೆದಾರರಿಗೆ ಭಾರಿ ಲಾಭ!

Share Market: ಆಟೋಮೊಬೈಲ್‌, ಐಟಿ, ಪಿಎಸ್‌ಯು (ಸಾರ್ವಜನಿಕ ವಲಯದ ಬ್ಯಾಂಕ್‌ಗಳು), ಖಾಸಗಿ ಬ್ಯಾಂಕ್‌ಗಳು ಹಾಗೂ ಮೂಲ ಸೌಕರ್ಯ ಕ್ಷೇತ್ರದ ಕಂಪನಿಗಳು ಲಾಭ ಗಳಿಸಿದವು. ಫಾರ್ಮಾ, ಎಫ್‌ಎಂಸಿಜಿ, ಇಂಧನ ಕ್ಷೇತ್ರದ ಕಂಪನಿಗಳು ನಷ್ಟ ಅನುಭವಿಸಿವೆ. ಆಕ್ಸಿಸ್‌ ಬ್ಯಾಂಕ್‌, ಎಲ್‌&ಟಿ, ಮಾರುತಿ ಸುಜುಕಿ, ಇಂಡಸ್‌ಐಎನ್‌ಡಿ ಬ್ಯಾಂಕ್‌, ಇನ್ಫೋಸಿಸ್‌, ಬಜಾಜ್‌, ಎಸ್‌ಬಿಐ, ಟೈಟಾನ್‌, ಐಸಿಐಸಿಐ ಬ್ಯಾಂಕ್‌ಗಳು ಲಾಭ ಗಳಿಸಿದ ಪ್ರಮುಖ ಕಂಪನಿಗಳಾಗಿವೆ.

VISTARANEWS.COM


on

Share Market
Koo

ಮುಂಬೈ: ಷೇರು ಮಾರುಕಟ್ಟೆಯಲ್ಲಿ (Share Market) ಗುರುವಾರ (ಮೇ 23) ಹೂಡಿಕೆದಾರರಿಗೆ ಭಾರಿ ಲಾಭವಾಗಿದೆ. ನಿಫ್ಟಿ (Nifty) 303 ಪಾಯಿಂಟ್ಸ್‌ ಏರಿಕೆಯೊಂದಿಗೆ ದಾಖಲೆಯ 22,900 ಪಾಯಿಂಟ್ಸ್‌ ತಲುಪಿದರೆ, ನಿಫ್ಟಿ 986 ಅಂಕಗಳ ಏರಿಕೆಯೊಂದಿಗೆ 75,206 ಪಾಯಿಂಟ್ಸ್‌ ತಲುಪುವ ಮೂಲಕ ದಾಖಲೆ ಸೃಷ್ಟಿಸಿತು. ಸೆನ್ಸೆಕ್ಸ್‌ (Sensex) ಶೇ.1.33ರಷ್ಟು ಏರಿಕೆಯಾದರೆ, ನಿಫ್ಟಿ ಕೂಡ ಶೇ.1.33ರಷ್ಟು ಏರಿಕೆಯಾಯಿತು. ನಿಫ್ಟಿ ಮಿಡ್‌ಕ್ಯಾಪ್‌ ಇಂಡೆಕ್ಸ್‌ ಕೂಡ 238 ಪಾಯಿಂಟ್‌ಗಳ ಏರಿಕೆಯೊಂದಿಗೆ 52,405 ಪಾಯಿಂಟ್ಸ್‌ ತಲುಪಿದರೆ, ನಿಫ್ಟಿಯ ಸ್ಮಾಲ್‌ಕ್ಯಾಪ್‌ ಕೂಡ 27 ಅಂಕಗಳ ಏರಿಕೆಯೊಂದಿಗೆ 16,909 ಪಾಯಿಂಟ್ಸ್‌ ತಲುಪಿತು.

ಆಟೋಮೊಬೈಲ್‌, ಐಟಿ, ಪಿಎಸ್‌ಯು (ಸಾರ್ವಜನಿಕ ವಲಯದ ಬ್ಯಾಂಕ್‌ಗಳು), ಖಾಸಗಿ ಬ್ಯಾಂಕ್‌ಗಳು ಹಾಗೂ ಮೂಲ ಸೌಕರ್ಯ ಕ್ಷೇತ್ರದ ಕಂಪನಿಗಳು ಲಾಭ ಗಳಿಸಿದವು. ಫಾರ್ಮಾ, ಎಫ್‌ಎಂಸಿಜಿ, ಇಂಧನ ಕ್ಷೇತ್ರದ ಕಂಪನಿಗಳು ನಷ್ಟ ಅನುಭವಿಸಿವೆ. ಆಕ್ಸಿಸ್‌ ಬ್ಯಾಂಕ್‌, ಎಲ್‌&ಟಿ, ಮಾರುತಿ ಸುಜುಕಿ, ಇಂಡಸ್‌ಐಎನ್‌ಡಿ ಬ್ಯಾಂಕ್‌, ಇನ್ಫೋಸಿಸ್‌, ಬಜಾಜ್‌, ಎಸ್‌ಬಿಐ, ಟೈಟಾನ್‌, ಐಸಿಐಸಿಐ ಬ್ಯಾಂಕ್‌ಗಳು ಲಾಭ ಗಳಿಸಿದ ಪ್ರಮುಖ ಕಂಪನಿಗಳಾಗಿವೆ.

ಇನ್ನು ಸನ್‌ ಫಾರ್ಮಾ, ಪವರ್‌ ಗ್ರಿಡ್‌, ಎನ್‌ಟಿಪಿಸಿ, ಜೆಎಸ್‌ಡಬ್ಲ್ಯೂ ಸ್ಟೀಲ್‌, ಐಟಿಸಿ, ಟಾಟಾ ಸ್ಟೀಲ್‌ ನಷ್ಟ ಹೊಂದಿದವು. ಕಳೆದ 6 ತಿಂಗಳಲ್ಲಿ ಬಾಂಬ್‌ ಸ್ಟಾಕ್‌ ಎಕ್ಸ್‌ಚೇಂಜ್‌ (BSE) ಪಟ್ಟಿಯಲ್ಲಿರುವ ಕಂಪನಿಗಳು 1 ಲಕ್ಷ ಕೋಟಿ ಡಾಲರ್‌ ಗಳಿಸಿವೆ ಎಂಬುದಾಗಿ ತಿಳಿದುಬಂದಿದೆ. ಇದರೊಂದಿಗೆ ಭಾರತದ ಈಕ್ವಿಟಿ ಮಾರುಕಟ್ಟೆಯ ಮೌಲ್ಯವು 5 ಲಕ್ಷ ಕೋಟಿ ಡಾಲರ್‌ ದಾಟುವ ಮೂಲಕ ಹೊಸ ಇತಿಹಾಸ ಸೃಷ್ಟಿಯಾದಂತಾಗಿದೆ.

2023ರ ನವೆಂಬರ್‌ನಲ್ಲಿ ಬಿಎಸ್‌ಇ ಒಟ್ಟು ಮಾರುಕಟ್ಟೆ ಮೊತ್ತವು 4 ಲಕ್ಷ ಕೋಟಿ ಡಾಲರ್‌ ಇತ್ತು. ಬಿಎಸ್‌ಇನಲ್ಲಿ ಲಿಸ್ಟ್‌ ಆಗಿರುವ ಕಂಪನಿಗಳ ಮಾರುಕಟ್ಟೆ ಬಂಡವಾಳವು ಕಳೆದ 6 ತಿಂಗಳಲ್ಲಿಯೇ 1 ಲಕ್ಷ ಕೋಟಿ ಡಾಲರ್‌ ಜಾಸ್ತಿಯಾಗಿದೆ. ಬಿಎಸ್‌ಇ ಲಿಸ್ಟ್‌ ಆಗಿರುವ ಕಂಪನಿಯಗಳ ಮಾರುಕಟ್ಟೆ ಬಂಡವಾಳವು 2007ರ ಮೇ ತಿಂಗಳಲ್ಲಿ 1 ಲಕ್ಷ ಕೋಟಿ ಡಾಲರ್‌ ತಲುಪಿತ್ತು. ಇದಾದ ಒಂದು ದಶಕದ ಬಳಿಕ ಅಂದರೆ, 2017ರ ಜುಲೈನಲ್ಲಿ 2 ಲಕ್ಷ ಕೋಟಿ ಡಾಲರ್‌ ತಲುಪಿತ್ತು. ಇನ್ನು 2021ರ ಮೇ ತಿಂಗಳಲ್ಲಿ 4 ಲಕ್ಷ ಕೋಟಿ ಡಾಲರ್‌ ಆಗಿತ್ತು. ಈಗ ಆರೇ ತಿಂಗಳಲ್ಲಿ ಮಾರುಕಟ್ಟೆ ಬಂಡವಾಳವು 1 ಲಕ್ಷ ಕೋಟಿ ಡಾಲರ್‌ ಜಾಸ್ತಿಯಾಗಿದೆ.

ಇದನ್ನೂ ಓದಿ: Equity Market: ದೇಶದ ಷೇರುಪೇಟೆಯಲ್ಲಿ ಗೂಳಿ ನೆಗೆತ; 6 ತಿಂಗಳಲ್ಲಿ 1 ಲಕ್ಷ ಕೋಟಿ ಡಾಲರ್‌ ಗಳಿಕೆ!

Continue Reading

ಮನಿ-ಗೈಡ್

Money Guide: ಜನಪ್ರಿಯವಾಗುತ್ತಿದೆ ʼಈಗ ಖರೀದಿಸಿ, ನಂತರ ಪಾವತಿಸಿʼ ಆಯ್ಕೆ: ಏನಿದು ಬಿಎನ್‌ಪಿಎಲ್‌? ಬಳಕೆ ಹೇಗೆ? ಇಲ್ಲಿದೆ ವಿವರ

Money Guide: ಯಾವುದೇ ಒಂದು ವಸ್ತು ಖರೀದಿಸಲು ತಕ್ಷಣಕ್ಕೆ ನಿಮ್ಮ ಬಳಿ ಹಣ ಇಲ್ಲದಿದ್ದರೆ ಹೆಸರೇ ಹೇಳುವಂತೆ ಈಗ ಖರೀದಿಸಿ ನಂತರ ಪಾವತಿಸಬಹುದು ಆಯ್ಕೆಯನ್ನು ಬಳಸಿಕೊಳ್ಳಬಹುದು. ಇ-ಕಾಮರ್ಸ್ ತಾಣಗಳು ಈ ವಿಧಾನದ ಮೂಲಕ ಗ್ರಾಹಕರಿಗೆ ವಸ್ತುಗಳ ಖರೀದಿಗೆ ಬಡ್ಡಿರಹಿತ ಕಿರು ಅವಧಿಯ ಸಾಲಗಳನ್ನು ಒದಗಿಸುತ್ತಿವೆ. ಅಂದರೆ ನೀವು ವಸ್ತು ಖರೀದಿಸಿದ ಬಳಿಕ ಹಂತ ಹಂತವಾಗಿ ಕಂತುಗಳಲ್ಲಿ ದುಡ್ಡು ಪಾವತಿಸದರಾಯ್ತು. ಅಂದರೆ ಈ ಸಾಲ ಬಳಸಿಕೊಂಡು ಗ್ರಾಹಕರು ವಸ್ತುಗಳನ್ನು ಖರೀದಿಸಿ, ಆ ಬಳಿಕ ಬಡ್ಡಿರಹಿತ ಇಎಂಐಗಳ ಮೂಲಕ ಪಾವತಿ ಮಾಡಬಹುದು.

VISTARANEWS.COM


on

Money Guide
Koo

ಬೆಂಗಳೂರು: ಬಿಎನ್‌ಪಿಎಲ್‌ (BNPL) ಬಗ್ಗೆ ನಿಮಗೆ ಗೊತ್ತೆ? ಬಿಎಸ್‌ಎಸ್‌ಎಲ್‌ ಗೊತ್ತು. ಇದೇನಿದು ಬಿಎನ್‌ಪಿಎಲ್‌ ಎಂದು ಎಂದು ಜಾಸ್ತಿ ತಲೆ ಕೆಡಿಸಿಕೊಳ್ಳಬೇಡಿ. ʼಈಗ ಖರೀದಿಸಿ, ನಂತರ ಪಾವತಿಸಿʼ (Buy Now, Pay Later)ಯ ಸಂಕ್ಷಿಪ್ತ ರೂಪವೇ ಬಿಎನ್‌ಪಿಎಲ್‌. ಯಾವುದೇ ಒಂದು ವಸ್ತು ಖರೀದಿಸಲು ತಕ್ಷಣಕ್ಕೆ ನಿಮ್ಮ ಬಳಿ ಹಣ ಇಲ್ಲದಿದ್ದರೆ ಹೆಸರೇ ಹೇಳುವಂತೆ ಈಗ ಖರೀದಿಸಿ ನಂತರ ಪಾವತಿಸಬಹುದು ಆಯ್ಕೆಯನ್ನು ಬಳಸಿಕೊಳ್ಳಬಹುದು. ಇ-ಕಾಮರ್ಸ್ ತಾಣಗಳು ಈ ವಿಧಾನದ ಮೂಲಕ ಗ್ರಾಹಕರಿಗೆ ವಸ್ತುಗಳ ಖರೀದಿಗೆ ಬಡ್ಡಿರಹಿತ ಕಿರು ಅವಧಿಯ ಸಾಲಗಳನ್ನು ಒದಗಿಸುತ್ತಿವೆ. ಅಂದರೆ ನೀವು ವಸ್ತು ಖರೀದಿಸಿದ ಬಳಿಕ ಹಂತ ಹಂತವಾಗಿ ಕಂತುಗಳಲ್ಲಿ ದುಡ್ಡು ಪಾವತಿಸದರಾಯ್ತು. ಅಂದರೆ ಈ ಸಾಲ ಬಳಸಿಕೊಂಡು ಗ್ರಾಹಕರು ವಸ್ತುಗಳನ್ನು ಖರೀದಿಸಿ, ಆ ಬಳಿಕ ಬಡ್ಡಿರಹಿತ ಇಎಂಐಗಳ ಮೂಲಕ ಪಾವತಿ ಮಾಡಬಹುದು. ಸದ್ಯ ಇದು ಭಾರತೀಯ ಮಧ್ಯಮ ವರ್ಗದ ಜನರ ನೆಚ್ಚಿನ ಆಯ್ಕೆ ಎನಿಸಿಕೊಂಡಿದೆ. ಈ ಬಗೆಗಿನ ವಿವರ ಇಲ್ಲಿದೆ (Money Guide).

ಗಮನ ಸೆಳೆಯುತ್ತಿದೆ

ಈ ಬಿಎನ್‌ಪಿಎಲ್‌ ಸಾಂಪ್ರದಾಯಿಕ ಕ್ರೆಡಿಟ್ ಕಾರ್ಡ್‌ ಮತ್ತು ಸಾಲಗಳಿಗೆ ಪರ್ಯಾಯವಾಗಿ ಗುರುತಿಸಿಕೊಂಡಿದೆ. ಬಡ್ಡಿ ಪಾವತಿಸಬೇಕಾಗಿಲ್ಲ ಎನ್ನುವ ಅಂಶವೇ ಈ ಪಾವತಿ ವಿಧಾನದ ಬಹುದೊಡ್ಡ ಪ್ಲಸ್‌ ಪಾಯಿಂಟ್‌. ಅಲ್ಲದೆ ಬಿಎನ್‌ಪಿಎಲ್ ಸೇವೆ ಸಾಮಾನ್ಯವಾಗಿ ತ್ವರಿತ ಮತ್ತು ಸುಲಭವಾಗಿ ಮಂಜೂರಾಗುತ್ತದೆ. ಇದಕ್ಕೆ ಕನಿಷ್ಠ ಕ್ರೆಡಿಟ್ ಚೆಕ್ ಗಳ ಅಗತ್ಯವಿರುತ್ತದೆ. ಆದರೆ ಗಮನಿಸಿ ಬಿಎನ್‌ಪಿಎಲ್ ತಿಂಗಳ ಮರುಪಾವತಿಯನ್ನು ಮಿಸ್ ಮಾಡಿದರೆ ಅದು ನಿಮ್ಮ ಸಿಬಿಲ್ ಸ್ಕೋರ್ ಮೇಲೆ ಕೆಟ್ಟ ಪರಿಣಾಮ ಬೀರುತ್ತದೆ. ಹೀಗಾಗಿ ಸೂಕ್ತ ಸಮಯದಲ್ಲಿ ಮರು ಪಾವತಿಗೆ ಗಮನ ಹರಿಸಿ. ಅಲ್ಲದೆ ಕ್ರೆಡಿಟ್‌ ಕಾರ್ಡ್‌ಗೆ ಹೋಲಿಸಿದರೆ ಬಿಎನ್‌ಪಿಎಲ್‌ ಕಾರ್ಡ್‌ಗಳಿಗೆ ಆರಂಭದಲ್ಲಿ ಅಲ್ಪ ಮೊತ್ತವಷ್ಟೇ ಲಭಿಸುತ್ತದೆ.

ಗಮನಿಸಬೇಕಾದ ಅಂಶ

ಬಿಎನ್‌ಪಿಎಲ್‌ ಕಾರ್ಡ್‌ ಪಡೆಯುವ ಮುನ್ನ ಈ ಅಂಶಗಳನ್ನು ಗಮನಿಸಿ.

  • ಬಜೆಟ್ ಮುಖ್ಯ: ಬಿಎನ್‌ಪಿಎಲ್ ಮೇಲ್ನೋಟಕ್ಕೆ ಅನುಕೂಲಕವೆಂದು ತೋರಬಹುದು. ಆದರೆ ನಿಮ್ಮ ಸಾಲ ಹೆಚ್ಚಾಗಲು ಇದು ಕಾರಣವಾಗಬಹುದು. ಬಿಎನ್‌ಪಿಎಲ್‌ ಕಾರ್ಡ್‌ ಪಡೆಯುವ ಮುನ್ನ ಅಸ್ತಿತ್ವದಲ್ಲಿರುವ ಸಾಲ ಮತ್ತು ಬಾಧ್ಯತೆಗಳನ್ನು ಪರಿಗಣಿಸಿ.
  • ಷರತ್ತುಗಳನ್ನು ಗಮನಿಸಿ: ಬಡ್ಡಿ-ಮುಕ್ತ ಎಂದು ಜಾಹೀರಾತು ನೀಡಲಾಗಿದ್ದರೂ ಪಾವತಿಯ ವಿಳಂಬಕ್ಕೆ ಹೆಚ್ಚಿನ ದಂಡ ಪಾವತಿಸಬೇಕಾಗುತ್ತದೆ. ಈ ದಂಡಗಳು ಮತ್ತು ಯಾವುದೇ ಪೂರ್ವಪಾವತಿ ನಿರ್ಬಂಧಗಳನ್ನು ಅರ್ಥ ಮಾಡಿಕೊಳ್ಳಲು ನಿಯಮಗಳು ಮತ್ತು ಷರತ್ತುಗಳನ್ನು ಸಂಪೂರ್ಣವಾಗಿ ಓದಿ.
  • ಸಿಬಿಲ್‌ ಸ್ಕೋರ್‌ ಮೇಲೆ ಪರಿಣಾಮ: ವಿಳಂಬ ಪಾವತಿ ನಿಮ್ಮ ಸಿಬಿಲ್‌ ಸ್ಕೋರ್‌ ಮೇಲೆ ಪರಿಣಾಮ ಬೀರುತ್ತದೆ. ಆದ್ದರಿಂದ ಈ ಬಗ್ಗೆ ಎಚ್ಚರ ವಹಿಸಿ.
  • ಎಲ್ಲ ಶುಲ್ಕಗಳನ್ನು ಅರ್ಥ ಮಾಡಿಕೊಳ್ಳಿ: ಕೆಲವು ಬಿಎನ್‌ಪಿಎಲ್‌ ಸೇವೆಗಳು ಸಂಸ್ಕರಣಾ ಶುಲ್ಕಗಳನ್ನು ಹೊಂದಿರುತ್ತವೆ. ಇದರಲ್ಲಿ ಒಳಗೊಂಡಿರುವ ಎಲ್ಲ ವೆಚ್ಚಗಳನ್ನು ಅರ್ಥಮಾಡಿಕೊಳ್ಳಿ. ವಿಳಂಬ ಪಾವತಿ ಶುಲ್ಕಗಳು, ಸಂಸ್ಕರಣಾ ಶುಲ್ಕಗಳು ಅಥವಾ ದಂಡಗಳಂತಹ ಗುಪ್ತ ಶುಲ್ಕಗಳನ್ನು ಗಮನಿಸಿ.
  • ಸೀಮಿತ ಬಳಕೆ: ಬಿಎನ್‌ಪಿಎಲ್ ಎಲ್ಲೆಡೆ ಇಲ್ಲದಿರಬಹುದು. ಕ್ರೆಡಿಟ್ ಕಾರ್ಡ್‌ಗಳಿಗಿಂತ ಭಿನ್ನವಾಗಿ, ಬಿಎನ್‌ಪಿಎಲ್ ಕಾರ್ಡ್‌ ಅನ್ನು ನಿರ್ದಿಷ್ಟ ವ್ಯಾಪಾರಿಗಳು ಅಥವಾ ಪ್ಲಾಟ್‌ಫಾರ್ಮ್‌ಗಳು ಮಾತ್ರವೇ ಬಳಸುತ್ತವೆ. ನಿಮ್ಮ ನೆಚ್ಚಿನ ಅಂಗಡಿಗಳು ಮತ್ತು ಇ-ಕಾಮರ್ಸ್ ಪ್ಲಾಟ್‌ಫಾರ್ಮ್‌ಗಳು ಬಿಎನ್‌ಪಿಎಲ್ ಆಯ್ಕೆಯನ್ನು ಸ್ವೀಕರಿಸುತ್ತವೆಯೇ ಎಂದು ಪರಿಶೀಲಿಸಿ. ಅಲ್ಲದೆ ಇದು ವಿದೇಶದಲ್ಲಿ ಉಪಯೋಗಕ್ಕೆ ಬರುವುದಿಲ್ಲ.

ಪ್ರಮುಖ ಬ್ರ್ಯಾಂಡ್‌ಗಳು

ಭಾರತದಲ್ಲಿ ಲೇಜಿ ಪೇ, ಸಿಂಪ್ಲ, ಅಮೆಜಾನ್ ಪೇ ಲೇಟರ್, ಫ್ಲಿಪ್ ಕಾರ್ಟ್ ಪೇ ಲೇಟರ್ ಹಾಗೂ ಝೆಸ್ಟ್ ಮನಿ ಪ್ರಮುಖ ಬಿಎನ್‌ಪಿಎಲ್ ಬ್ರ್ಯಾಂಡ್ ಎನಿಸಿಕೊಂಡಿವೆ. ಈ ಎಲ್ಲ ಬ್ರ್ಯಾಂಡ್‌ಗಳು ಕಾರ್ಯವೈಖರಿ ಸಾಮಾನ್ಯವಾಗಿ ಒಂದೇ ರೀತಿಯಲ್ಲಿ ಇರುತ್ತದೆ. ನಿರ್ದಿಷ್ಟ ಇ-ಕಾಮರ್ಸ್ ತಾಣದಿಂದ ಖರೀದಿಸುವಾಗ ನೀವು ‘Buy now, pay later’ ಆಯ್ಕೆ ಮೇಲೆ ಕ್ಲಿಕ್ ಮಾಡಬೇಕು. ಒಟ್ಟು ಮೊತ್ತದಲ್ಲಿ ಸಣ್ಣ ಮೊತ್ತವನ್ನು ಆರಂಭದಲ್ಲಿ ಡೌನ್ ಪೇಮೆಂಟ್ ಮಾಡಬೇಕು. ಉಳಿದ ಮೊತ್ತವನ್ನು ಬಡ್ಡಿರಹಿತ ಇಎಂಐ ಮೂಲಕ ನಿರ್ದಿಷ್ಟ ಅವಧಿಯೊಳಗೆ ಪಾವತಿಸಬೇಕು.

ಯಾರು ಖರೀದಿಸಬಹುದು?

ಬಿಎನ್‌ಪಿಎಲ್‌ ಕಾರ್ಡ್‌ ಅನ್ನು ಖರೀದಿಸಲು ಬೇಕಾದ ಅರ್ಹತೆಗಳು: ಭಾರತದ ಟೈರ್ 1 ಅಥವಾ ಟೈರ್ 2 ನಗರದ ನಿವಾಸಿಯಾಗಿರಬೇಕು, ಕನಿಷ್ಠ 18 ವರ್ಷ ವಯಸ್ಸಾಗಿರಬೇಕು, ವೇತನ ಪಡೆಯುತ್ತಿರಬೇಕು, ನಿಮ್ಮ ಬ್ಯಾಂಕ್ ಖಾತೆ ಹಾಗೂ ಇತರ ಕೆವೈಸಿ ದಾಖಲೆಗಳನ್ನು ಹೊಂದಿರಬೇಕು.

ಇದನ್ನೂ ಓದಿ: Money Guide: ಮನೆಯಲಿ ಇದ್ದರೆ ಚಿನ್ನ ಈ ನಿಯಮ ಅರಿತಿರುವುದು ಚೆನ್ನ: ಗೋಲ್ಡ್‌ ಟ್ಯಾಕ್ಸ್‌ ಏನು ಹೇಳುತ್ತದೆ?

Continue Reading
Advertisement
Karnataka rain
ಮಳೆ35 seconds ago

Karnataka Rain : ಮಳೆ ಅವಘಡಕ್ಕೆ ಜನರು ತತ್ತರ; ಧರೆಗುರುಳಿದ ಮರಗಳು, ಕುಸಿದು ಬಿದ್ದ ಮನೆಗಳು

Shivasharane Hemaraddi Mallamma Jayanti celebration in Srisailam
ಯಾದಗಿರಿ3 mins ago

Yadgiri News: ಶ್ರೀಶೈಲಂನಲ್ಲಿ ಶಿವಶರಣೆ ಹೇಮರಡ್ಡಿ ಮಲ್ಲಮ್ಮ ಜಯಂತಿ

union minister Pralhad Joshi latest statement in bidar
ಕರ್ನಾಟಕ5 mins ago

Pralhad Joshi: ಅಮಾಯಕ ಹೆಣ್ಣುಮಕ್ಕಳ ಹತ್ಯೆಯಾದರೂ ಪೊಲೀಸರ ಮೌನ; ಪ್ರಲ್ಹಾದ ಜೋಶಿ ಆರೋಪ

Rave party 86 people including Hema and Ashi consumed drugs in the rave party Blood report positive
ಕ್ರೈಂ7 mins ago

Rave party: ರೇವ್‌ ಪಾರ್ಟಿಯಲ್ಲಿ ಹೇಮಾ, ಆಶಿ ಸೇರಿ 86 ಮಂದಿಯಿಂದ ಮಾದಕ ವಸ್ತು ಸೇವನೆ; ಬ್ಲಡ್‌ ರಿಪೋರ್ಟ್‌ ಪಾಸಿಟಿವ್‌

Remedies For SadeSati
ಧಾರ್ಮಿಕ10 mins ago

Remedies For SadeSati: ಶನಿಯ ವಕ್ರದೃಷ್ಟಿ ಕಡಿಮೆ ಮಾಡಲು ಇಲ್ಲಿದೆ ಸುಲಭ ಪರಿಹಾರ

Sharad Kelkar
ಸಿನಿಮಾ12 mins ago

Sharad Kelkar: ‘ಬಾಹುಬಲಿ’ಗೆ ಧ್ವನಿ ನೀಡಿದ್ದು ಮರೆಯಲಾಗದ ಅನುಭವ ಎಂದ ಶರದ್ ಕೇಳ್ಕರ್

Glenn Maxwell
ಪ್ರಮುಖ ಸುದ್ದಿ28 mins ago

Glenn Maxwell : ಮ್ಯಾಕ್ಸ್​​ವೆಲ್​ಗೆ ಕೊಟ್ಟ ಹಣ ವಾಪಸ್​ ಪಡೆಯಿರಿ; ಅಭಿಮಾನಿಗಳ ಒತ್ತಾಯ

Theatre
ಸಿನಿಮಾ31 mins ago

‘ಸ್ಟಾರ್‌’ ಸಿನಿಮಾಗಳಿಲ್ಲದ ಕಾರಣ ಚಿತ್ರಮಂದಿರಗಳ ಬಂದ್‌ಗೆ ಚಿಂತನೆ;‌ ನಿರ್ಮಾಪಕರಿಂದ ಭಾರಿ ಆಕ್ರೋಶ!

Dengue Fever
ಆರೋಗ್ಯ33 mins ago

Dengue Fever: ಮಳೆಗಾಲ ಬರುತ್ತಿದೆ! ಡೆಂಗ್ಯೂ ಬಗ್ಗೆ ಇರಲಿ ಎಚ್ಚರಿಕೆ!

Star Gown Fashion
ಫ್ಯಾಷನ್48 mins ago

Star Gown Fashion: ಕೇಪ್‌ ಗೌನ್‌ನಲ್ಲಿ ತ್ರಿಲೋಕ ಸುಂದರಿಯಂತೆ ಕಂಡ ನಟಿ ನಮ್ರತಾ ಗೌಡ!

Sharmitha Gowda in bikini
ಕಿರುತೆರೆ8 months ago

Geetha Serial Kannada: ನಿದ್ದೆ ಕದ್ದ ಚೋರಿ! ನಟಿ `ಭಾನುಮತಿ’ ಹಾಟ್‌ ಪೋಟೊಗಳಿಗೆ ಫ್ಯಾನ್ಸ್ ಫುಲ್ ಫಿದಾ

Kannada Serials
ಕಿರುತೆರೆ7 months ago

Kannada Serials TRP: 2ನೇ ಸ್ಥಾನದಲ್ಲಿ 2 ಧಾರಾವಾಹಿಗಳು; ಟಿಆರ್‌ಪಿ ರೇಸ್‌ನಲ್ಲಿಲ್ಲ ಭಾಗ್ಯಲಕ್ಷ್ಮೀ!

Bigg Boss- Saregamapa 20 average TRP
ಕಿರುತೆರೆ7 months ago

Kannada Serials TRP: ಏಳನೇ ಸ್ಥಾನಕ್ಕೆ ʻಅಮೃತಧಾರೆʼ ಕುಸಿತ; ಬಿಗ್‌ ಬಾಸ್‌-ಸರಿಗಮಪ ಟಿಆರ್‌ಪಿ ಎಷ್ಟು?

galipata neetu
ಕಿರುತೆರೆ6 months ago

Kanyadana Serial: ಕಿರುತೆರೆಗೆ ಮತ್ತೆ ಎಂಟ್ರಿ ಕೊಟ್ಟ ʻಗಾಳಿಪಟʼ ಖ್ಯಾತಿಯ ʻನೀತುʼ!

Kannada Serials
ಕಿರುತೆರೆ8 months ago

Kannada Serials TRP: ನಾಲ್ಕನೇ ಸ್ಥಾನಕ್ಕೆ ಕುಸಿತ ಕಂಡ ʻಸೀತಾ ರಾಮʼ; ಟಿಆರ್‌ಪಿ ರೇಸ್‌ಗೆ ʻಭಾಗ್ಯಲಕ್ಷ್ಮಿʼ ಬ್ಯಾಕ್‌!

Kannada Serials
ಕಿರುತೆರೆ8 months ago

Kannada Serials TRP: ಟಿಆರ್‌ಪಿಯಲ್ಲಿ ʻಭಾಗ್ಯಲಕ್ಷ್ಮೀʼ ಹವಾ; ʻಪುಟ್ಟಕ್ಕನ ಮಕ್ಕಳುʼ ಧಾರಾವಾಹಿಗೆ ಸಂಕಷ್ಟ!

Bigg Boss' dominates TRP; Sita Rama fell to the sixth position
ಕಿರುತೆರೆ7 months ago

Kannada Serials TRP: ಟಿಆರ್‌ಪಿಯಲ್ಲಿ ʻಬಿಗ್ ಬಾಸ್ʼದೇ ಮೇಲುಗೈ; 6ನೇ ಸ್ಥಾನಕ್ಕೆ ಕುಸಿದ ʻಸೀತಾ ರಾಮʼ

geetha serial Dhanush gowda engagement
ಕಿರುತೆರೆ5 months ago

Dhanush Gowda: ಗೀತಾ ಧಾರಾವಾಹಿ ನಟನ ನಿಶ್ಚಿತಾರ್ಥ; ಭವ್ಯಾಳ ಕಮೆಂಟ್‌ ಬಾಕ್ಸ್‌ ಆಫ್‌!

varun
ಕಿರುತೆರೆ6 months ago

Brindavana Serial: ʼಬೃಂದಾವನʼ ಧಾರಾವಾಹಿಯಲ್ಲಿ ದೊಡ್ಡ ಟ್ವಿಸ್ಟ್‌; ಪ್ರಮುಖ ಪಾತ್ರಧಾರಿಯೇ ಬದಲು

Kannada Serials
ಕಿರುತೆರೆ8 months ago

Kannada Serials TRP: ಟಿಆರ್‌ಪಿಯಲ್ಲಿ ಏರಿಕೆ ಕಂಡ ʻಅಮೃತಧಾರೆʼ; ʻಗಟ್ಟಿಮೇಳʼಕ್ಕೆ ನಾಲ್ಕನೇ ಸ್ಥಾನ!

dina bhavishya read your daily horoscope predictions for May 23 2024
ಭವಿಷ್ಯ14 hours ago

Dina Bhavishya : 12 ರಾಶಿಯವರ ಇಂದಿನ ಭವಿಷ್ಯ ಹೇಗಿದೆ? ಯಾರಿಗೆ ಶುಭ, ಯಾರಿಗೆ ಅಶುಭ ಫಲ?

Karnataka Weather Forecast
ಮಳೆ2 days ago

Karnataka Weather : ಮುಂದುವರಿಯಲಿದೆ ವರುಣಾರ್ಭಟ; ಬೆಂಗಳೂರಲ್ಲೂ ಭಾರಿ ಮಳೆ ನಿರೀಕ್ಷೆ!

Karnataka Rain
ಮಳೆ2 days ago

Karnataka Rain : ಭಾರಿ ಮಳೆಗೆ ಕರೆಂಟ್‌ ಕಟ್‌, ಕತ್ತಲಲ್ಲೇ ರೋಗಿಗಳಿಗೆ ಟ್ರೀಟ್‌ಮೆಂಟ್‌; ಮರ ಬಿದ್ದರೂ ಪಾರಾದ ತಾಯಿ-ಮಗ

Love Case Father throws hot water on man who loved his daughter for coming home
ಕೊಡಗು2 days ago

Love Case : ಮನೆಗೆ ಬಂದ ಪ್ರೇಮಿಗೆ ಕೊತ ಕೊತ ಕುದಿಯುವ ನೀರು ಎರಚಿದ ಯುವತಿ ತಂದೆ!

Contaminated Water
ಮೈಸೂರು2 days ago

Contaminated Water : ಡಿ ಸಾಲುಂಡಿಯಲ್ಲಿ ಕಲುಷಿತ ನೀರು ಸೇವಿಸಿ ಅಸ್ವಸ್ಥಗೊಂಡಿದ್ದ ಯುವಕ ಸಾವು

Karnataka Rain
ಮಳೆ3 days ago

Karnataka Rain : ಬಂಗಾಳ ಕೊಲ್ಲಿಯಲ್ಲಿ ವಾಯುಭಾರ ಕುಸಿತ; ಸಮುದ್ರಕ್ಕಿಳಿಯದಂತೆ ಮೀನುಗಾರರಿಗೆ ಎಚ್ಚರಿಕೆ

Karnataka Rain
ಮಳೆ4 days ago

Karnataka Rain : ಒಂದೇ ಮಳೆಗೆ ಹೊಳೆಯಂತಾದ ಬೆಂಗಳೂರು ರಸ್ತೆಗಳು! ಕಳಸದಲ್ಲೂ ಮುಂದುವರಿದ ಅಬ್ಬರ

Karnataka rain
ಮಳೆ4 days ago

Karnataka Rain : ವಿಜಯನಗರದಲ್ಲಿ ಸಿಡಿಲಿಗೆ ಜಾನುವಾರು ಬಲಿ; ಬೆಂಗಳೂರು ಸೇರಿ ಹಲವೆಡೆ ಭಾರಿ ಮಳೆ

Karnataka Rain
ಮಳೆ4 days ago

Karnataka Rain: ಧಾರಾಕಾರ ಮಳೆಗೆ ಕಾಂಪೌಂಡ್ ಕುಸಿದು 4 ಬೈಕ್‌ಗಳು ಜಖಂ; ಮದುವೆ ಮಂಟಪಕ್ಕೆ ನುಗ್ಗಿದ ನೀರು‌

Prajwal Revanna Case JDS calls CD Shivakumar pen drive gang
ರಾಜಕೀಯ6 days ago

Prajwal Revanna Case: CD ಶಿವಕುಮಾರ್ ಪೆನ್ ಡ್ರೈವ್ ಗ್ಯಾಂಗ್ ಎಂದ ಕುಟುಕಿದ ಜೆಡಿಎಸ್‌!

ಟ್ರೆಂಡಿಂಗ್‌