Janhvi Kapoor: ಕ್ಯೂಟ್‌ ಆಗಿ ಬರ್ತಡೇಗೆ ವಿಶ್‌ ಮಾಡಿದ ಜಾನ್ವಿ ಕಪೂರ್ ಬಾಯ್‌ಫ್ರೆಂಡ್‌! - Vistara News

ಬಾಲಿವುಡ್

Janhvi Kapoor: ಕ್ಯೂಟ್‌ ಆಗಿ ಬರ್ತಡೇಗೆ ವಿಶ್‌ ಮಾಡಿದ ಜಾನ್ವಿ ಕಪೂರ್ ಬಾಯ್‌ಫ್ರೆಂಡ್‌!

Janhvi Kapoor: ಈ ಎರಡು ಫೋಟೊ ಹಂಚಿಕೊಂಡು “ಜನ್ಮದಿನದ ಶುಭಾಶಯಗಳು” ಎಂದು ಬರೆದಿದ್ದಾರೆ. ಜಾನ್ವಿ ತನ್ನ ಹುಟ್ಟುಹಬ್ಬದಂದು ಶಿಖರ್ ಜತೆ ತಿರುಪತಿಯ ತಿರುಮಲ ದೇವಸ್ಥಾನಕ್ಕೆ ಭೇಟಿ ನೀಡಿದ್ದರು.

VISTARANEWS.COM


on

Shikhar Pahariya wishes Janhvi Kapoor on birthday
ಮಹತ್ವದ, ಕುತೂಹಲಕರ ಸುದ್ದಿಗಾಗಿ ಫಾಲೊ ಮಾಡಿ
Koo

ಬೆಂಗಳೂರು: ಮಾರ್ಚ್ 6 ಜಾನ್ವಿ ಕಪೂರ್ (Janhvi Kapoor) ಅವರ ಜನ್ಮದಿನ. ಅಭಿಮಾನಿಗಳು ಸೇರಿದಂತೆ ನಟಿಗೆ ಇಡೀ ಬಾಲಿವುಡ್‌ ಶುಭ ಹಾರೈಸಿದೆ. ಜಾನ್ವಿ ಕಪೂರ್ ಬಾಯ್‌ಫ್ರೆಂಡ್‌ ಎನಿಸಿಕೊಂಡಿರುವ ಶಿಖರ್ ಪಹಾರಿಯಾ (Shikhar Pahariya) ಕೂಡ ಕ್ಯೂಟ್‌ ಆಗಿ ವಿಶ್‌ ಮಾಡಿದ್ದಾರೆ. ಪ್ಯಾರಿಸ್‌ ಐಫೆಲ್ ಟವರ್ ಜೋಡಿ ಒಟ್ಟಿಗೆ ನಿಂತು ನೋಡುವ ಫೋಟೊ ಕೂಡ ನಟಿ ಹಂಚಿಕೊಂಡಿದ್ದಾರೆ.

ಶಿಖರ್ ಅವರು ಜಾನ್ವಿಯ ಹುಟ್ಟುಹಬ್ಬದಂದು, ಎರಡು ಫೋಟೊಗಳನ್ನು ಪೋಸ್ಟ್ ಮಾಡಿದ್ದಾರೆ. ಮೊದಲ ಫೋಟೊದಲ್ಲಿ ಜೋಡಿ ಒಟ್ಟಿಗೆ ಪ್ಯಾರಿಸ್‌ ಐಫೆಲ್ ಟವರ್ ಒಟ್ಟಿಗೆ ನೋಡುತ್ತಿರುವುದು. ಇನ್ನೊಂದು ಜಾನ್ವಿ ಅವರ ಅಚ್ಚು ಮೆಚ್ಚಿನ ನಾಯಿಗಳೊಂದಿಗೆ ಪೋಸ್‌ ಕೊಟ್ಟಿರುವುದು. ಈ ಎರಡು ಫೋಟೊ ಹಂಚಿಕೊಂಡು “ಜನ್ಮದಿನದ ಶುಭಾಶಯಗಳು” ಎಂದು ಬರೆದಿದ್ದಾರೆ. ಜಾನ್ವಿ ತನ್ನ ಹುಟ್ಟುಹಬ್ಬದಂದು ಶಿಖರ್ ಜತೆ ತಿರುಪತಿಯ ತಿರುಮಲ ದೇವಸ್ಥಾನಕ್ಕೆ ಭೇಟಿ ನೀಡಿದ್ದರು.

ನಟಿಯ ಕೈಯಲ್ಲಿ ಹಲವಾರು ಸಿನಿಮಾಗಳಿವೆ. ಮೂರು ಸಿನಿಮಾಗಳು ಬಿಡುಗಡೆಗೆ ಸಜ್ಜಾಗಿವೆ. ‘ದೇವರ’ ನಂತರ ಮತ್ತೊಂದು ತೆಲುಗು ಚಿತ್ರದಲ್ಲಿ ನಟಿ ಜಾನ್ವಿ ಕಪೂರ್ ನಟಿಸಲು ಸಿದ್ಧರಾಗಿದ್ದಾರೆ. ಬುಚ್ಚಿ ಬಾಬು ಸನಾ ನಿರ್ದೇಶಿಸುತ್ತಿರುವ 16ನೇ ಚಿತ್ರದಲ್ಲಿ ರಾಮ್ ಚರಣ್ ಜತೆ ತೆರೆ ಹಂಚಿಕೊಳ್ಳಲಿದ್ದಾರೆ. ಜಾನ್ವಿ ಕಪೂರ್ ಕೊನೆಯದಾಗಿ ವರುಣ್ ಧವನ್ ಜತೆ ‘ಬವಾಲ್’ ಚಿತ್ರದಲ್ಲಿ ಕಾಣಿಸಿಕೊಂಡಿದ್ದರು.

ಇದನ್ನೂ ಓದಿ: Janhvi Kapoor: ಜನುಮದಿನದಂದೇ ಗುಡ್‌ನ್ಯೂಸ್‌ ಕೊಟ್ಟ ಜಾನ್ವಿ ಕಪೂರ್: ರಾಮ್‌ಚರಣ್‌ ಜತೆ ರೊಮ್ಯಾನ್ಸ್‌!

‘ಆರ್‌ಸಿ 16’ ಮತ್ತು ‘ದೇವರ’ ಹೊರತುಪಡಿಸಿ, ಜಾನ್ವಿ ಅವರು ರಾಜ್‌ಕುಮಾರ್ ರಾವ್ ಎದುರು ‘ಮಿಸ್ಟರ್ ಆ್ಯಂಡ್ ಮಿಸಸ್ ಮಹಿ’, ಸುಧಾಂಶು ಸರಿಯಾ ಅವರ ‘ಉಲಾಜ್’ ಮತ್ತು ವರುಣ್ ಧವನ್ ಎದುರು ‘ಸನ್ನಿ ಸಂಸ್ಕರಿ ಕಿ ತುಳಸಿ ಕುಮಾರಿ’ ಸಿನಿಮಾಗಳನ್ನು ಹೊಂದಿದ್ದಾರೆ.

ಕ್ಷಣ ಕ್ಷಣದ ಮಾಹಿತಿಗಾಗಿ Vistara News FaceBook ಪೇಜ್ ಫಾಲೋ ಮಾಡಿ
ಮಹತ್ವದ ಮಾಹಿತಿಗಾಗಿ ವಿಸ್ತಾರ ನ್ಯೂಸ್ ಆ್ಯಪ್ ಉಚಿತವಾಗಿ ಡೌನ್ ಲೋಡ್ ಮಾಡಿಕೊಳ್ಳಿ: Andriod App | IOS App
Continue Reading
Click to comment

Leave a Reply

Your email address will not be published. Required fields are marked *

ಸಿನಿಮಾ

Aryan Khan: ದಿಲ್ಲಿಯ ಸಣ್ಣ ಮನೆಯಲ್ಲಿದ್ದ ಶಾರುಖ್‌ ದಂಪತಿ; ಅಲ್ಲಿನ ಬಂಗಲೆಯನ್ನು 37 ಕೋಟಿ ರೂ.ಗೆ ಖರೀದಿಸಿದ ಪುತ್ರ!

ಆರ್ಯನ್ ಖಾನ್ (Aryan Khan) ಅವರು ದಕ್ಷಿಣ ದೆಹಲಿಯ ಪಂಚಶೀಲ್ ಪಾರ್ಕ್‌ನಲ್ಲಿ 37 ಕೋಟಿ ರೂ. ಮೌಲ್ಯದ ಎರಡು ಮಹಡಿಯ ಬಂಗಲೆಯನ್ನು ಖರೀದಿಸಿದ್ದಾರೆ. ಶಾರುಖ್ ಖಾನ್ ಮತ್ತು ಅವರ ಪತ್ನಿ ಗೌರಿ ಖಾನ್ ತಮ್ಮ ಆರಂಭಿಕ ದಿನಗಳಲ್ಲಿ ಇದೇ ಕಟ್ಟಡದ ನೆಲಮಾಳಿಗೆ ಮತ್ತು ನೆಲಮಹಡಿಯಲ್ಲಿ ವಾಸಿಸುತ್ತಿದ್ದರು ಎನ್ನಲಾಗಿದೆ.

VISTARANEWS.COM


on

By

Aryan Khan
Koo

ಬಾಲಿವುಡ್ ಬಾದ್ ಷಾ ಶಾರುಖ್ ಖಾನ್ ಅವರ ಪುತ್ರ (son of shah rukh khan) ಆರ್ಯನ್ ಖಾನ್ (Aryan Khan:) ತಮ್ಮ ಚೊಚ್ಚಲ ನಿರ್ದೇಶನದ ಶೋ ‘ಸ್ಟಾರ್‌ಡಮ್’ (stardom) ಮೂಲಕ ಬಾಲಿವುಡ್‌ಗೆ (bollywood) ಪದಾರ್ಪಣೆ ಮಾಡಲು ಸಜ್ಜಾಗಿದ್ದಾರೆ. ಈ ನಡುವೆ ಅವರು ಈಗ ದೆಹಲಿಯಲ್ಲಿ 37 ಕೋಟಿ ರೂಪಾಯಿ ಮೌಲ್ಯದ ಐಷಾರಾಮಿ ಬಂಗಲೆಯನ್ನು (luxury property) ಖರೀದಿಸಿದ್ದಾರೆ.

ಆರ್ಯನ್ ಖಾನ್ ಅವರು ದಕ್ಷಿಣ ದೆಹಲಿಯ ಪಂಚಶೀಲ್ ಪಾರ್ಕ್‌ನಲ್ಲಿ 37 ಕೋಟಿ ರೂ. ಮೌಲ್ಯದ ಎರಡು ಮಹಡಿಯ ಬಂಗಲೆಯನ್ನು ಖರೀದಿಸಿದ್ದಾರೆ. ಶಾರುಖ್ ಖಾನ್ ಮತ್ತು ಅವರ ಪತ್ನಿ ಗೌರಿ ಖಾನ್ ತಮ್ಮ ಆರಂಭಿಕ ದಿನಗಳಲ್ಲಿ ಇದೇ ಕಟ್ಟಡದ ನೆಲಮಾಳಿಗೆ ಮತ್ತು ನೆಲಮಹಡಿಯಲ್ಲಿ ವಾಸಿಸುತ್ತಿದ್ದರು ಎನ್ನಲಾಗಿದೆ.

ಆರ್ಯನ್ ಖಾನ್ ಅವರ ಖರೀದಿಯ ವಹಿವಾಟನ್ನು ಮೇ 2024ರಲ್ಲಿ ನೋಂದಾಯಿಸಲಾಗಿದ್ದು 2.64 ಕೋಟಿ ರೂಪಾಯಿಗಳ ಮುದ್ರಾಂಕ ಶುಲ್ಕವನ್ನು ಪಾವತಿಸಲಾಗಿದೆ. ವರದಿಯ ಪ್ರಕಾರ, ಆರ್ಯನ್ ಅವರ ತಾಯಿ ಪ್ರಸಿದ್ಧ ಇಂಟೀರಿಯರ್ ಡಿಸೈನರ್ ಗೌರಿ ಖಾನ್ ಅವರು ಮನೆಯನ್ನು ವಿನ್ಯಾಸಗೊಳಿಸಿದ್ದಾರೆ. ಇದು ದಂಪತಿಗೆ ಭಾವನಾತ್ಮಕ ಮಹತ್ವವನ್ನು ಹೊಂದಿದೆ. ಯಾಕೆಂದರೆ ಇದು ಅವರು ಮೊದಲು ಭೇಟಿಯಾದ ನಗರವಾಗಿದೆ.

Aryan Khan
Aryan Khan


ಶಾರುಖ್ ಖಾನ್ ಅವರು ಪಂಚಶೀಲ್ ಪಾರ್ಕ್‌ನಲ್ಲಿ 27,000 ಚದರ ಅಡಿ ವಿಸ್ತೀರ್ಣ ಹೊಂದಿರುವ ಹೆರಿಟೇಜ್ ವಿಲ್ಲಾವನ್ನು ಹೊಂದಿದ್ದಾರೆ. ಅವರು 2001ರಲ್ಲಿ 13 ಕೋಟಿ ರೂ. ಗೆ ಈ ಆಸ್ತಿಯನ್ನು ಖರೀದಿಸಿದ್ದರು. ಅದರ ಮೌಲ್ಯ ಈಗ ಸುಮಾರು 200 ಕೋಟಿ ಎಂದು ಅಂದಾಜಿಸಲಾಗಿದೆ.

ಇದನ್ನೂ ಓದಿ: Bollywood Divorce Case: ವಿಚ್ಛೇದನದ ಬಳಿಕ ಪತ್ನಿಗೆ ದುಬಾರಿ ʼಜೀವನಾಂಶʼ ನೀಡಿದ ಬಾಲಿವುಡ್ ಸ್ಟಾರ್‌ಗಳಿವರು!


ಆರ್ಯನ್ ಖಾನ್ ತಮ್ಮ ನಿರ್ದೇಶನದ ಚೊಚ್ಚಲ ವೆಬ್‌ ಸಿರೀಸ್‌ ʼಸ್ಟಾರ್‌ಡಮ್‌ʼನೊಂದಿಗೆ ತೆರೆಗೆ ಬರಲು ಸಿದ್ಧರಾಗಿದ್ದಾರೆ. ಇದರಲ್ಲಿ ಅವರು ಪ್ರಮುಖ ನಾಯಕರಲ್ಲಿ ಒಬ್ಬರಾಗಿ ಕಾಣಿಸಿಕೊಳ್ಳಲಿದ್ದಾರೆ. ಇದರಲ್ಲಿ ಶಾರುಖ್ ಖಾನ್, ರಣಬೀರ್ ಕಪೂರ್ ಮತ್ತು ರಣವೀರ್ ಸಿಂಗ್ ಅತಿಥಿ ಪಾತ್ರದಲ್ಲಿ ಬಾಬಿ ಡಿಯೋಲ್ ಮತ್ತು ಮೋನಾ ಕಪೂರ್ ಮಹತ್ವದ ಪಾತ್ರಗಳನ್ನು ನಿರ್ವಹಿಸುತ್ತಿದ್ದಾರೆ ಎನ್ನಲಾಗಿದೆ.

Continue Reading

ಸಿನಿಮಾ

Actor Shahrukh Khan: ಅಮೆರಿಕದಲ್ಲಿ ಶಾರುಖ್ ಖಾನ್‌ಗೆ ಶಸ್ತ್ರಚಿಕಿತ್ಸೆ; ಬಾಲಿವುಡ್‌ ಬಾದ್‌ಶಾಗೆ ಕಾಡುತ್ತಿರುವ ಸಮಸ್ಯೆ ಏನು?

Actor Shahrukh Khan: ಬಾಲಿವುಡ್‌ನ ಖ್ಯಾತ ನಟರಲ್ಲಿ ಒಬ್ಬರಾದ ಶಾರುಖ್ ಖಾನ್ ಕಣ್ಣಿನ ಸಮಸ್ಯೆಯಿಂದ ಬಳಲುತ್ತಿದ್ದಾರಂತೆ. 58 ವಯಸ್ಸಿನ ಈ ನಟನಿಗೆ ಕಣ್ಣಿನಲ್ಲಿ ಸಮಸ್ಯೆ ಉಂಟಾದ ಹಿನ್ನಲೆಯಲ್ಲಿ ಅಮೇರಿಕಾದಲ್ಲಿ ಕಣ್ಣಿನ ಶಸ್ತ್ರಚಿಕಿತ್ಸೆಗೆ ಒಳಗಾಗಲಿದ್ದಾರೆ ಎಂಬುದಾಗಿ ತಿಳಿದು ಬಂದಿದೆ. ವರದಿಗಳ ಪ್ರಕಾರ, ನಟ ಶಾರುಖ್ ಖಾನ್ ಜುಲೈ 29ರಂದು ಶಸ್ತ್ರ ಚಿಕಿತ್ಸೆಗಾಗಿ ಮುಂಬೈನ ಆಸ್ಪತ್ರೆಗೆ ಹೋಗಿದ್ದರು. ಆದರೆ, ಚಿಕಿತ್ಸೆಯು ಯೋಜಿಸಿದಂತೆ ನಡೆಯಲಿಲ್ಲ. ಹಾಗಾಗಿ ಅವರು ವಿದೇಶದಲ್ಲಿ ಹೆಚ್ಚಿನ ಚಿಕಿತ್ಸೆ ಪಡೆಯಲಿದ್ದಾರೆ ಎನ್ನಲಾಗಿದೆ.

VISTARANEWS.COM


on

Actor Shahrukh Khan
Koo


ಮುಂಬೈ: ಶಾರುಖ್ ಖಾನ್ ಬಾಲಿವುಡ್‍ನ ಖ್ಯಾತ ನಟರಲ್ಲಿ ಒಬ್ಬರು. ಇವರು ಬಾಲಿವುಡ್ ಚಿತ್ರರಂಗಕ್ಕೆ ಅನೇಕ ಸೂಪರ್ ಹಿಟ್ ಚಿತ್ರಗಳನ್ನು ನೀಡಿದ್ದಾರೆ. ಇವತ್ತಿಗೂ ಬಾಲಿವುಡ್‌ಗೆ ಇವರೇ ಬಾದ್‌ ಶಾ! 58ನೇ ವಯಸ್ಸಿನ ಈ ನಟನಿಗೆ ಕಣ್ಣಿನಲ್ಲಿ ಸಮಸ್ಯೆ ಉಂಟಾದ ಹಿನ್ನಲೆಯಲ್ಲಿ ಅಮೇರಿಕಾದಲ್ಲಿ ಕಣ್ಣಿನ ಶಸ್ತ್ರಚಿಕಿತ್ಸೆಗೆ ಒಳಗಾಗಲಿದ್ದಾರೆ ಎಂಬುದಾಗಿ ತಿಳಿದುಬಂದಿದೆ. ಶಾರುಖ್ ಖಾನ್ (Actor Shahrukh Khan)ಕೊನೆಯ ಬಾರಿಗೆ ರಾಜ್ ಕುಮಾರ್ ಹಿರಾನಿ ಅವರ ʼಡಂಕಿʼ ಚಿತ್ರದಲ್ಲಿ ಕಾಣಿಸಿಕೊಂಡಿದ್ದರು. ಇತ್ತೀಚೆಗೆ ಯುಕೆಯಿಂದ ಹಿಂದಿರುಗಿದ ನಟ ಈಗ ಕಣ್ಣಿನ ಚಿಕಿತ್ಸೆಗಾಗಿ ತುರ್ತಾಗಿ ಅಮೆರಿಕಕ್ಕೆ ಹಾರಲಿದ್ದಾರೆ ಎಂದು ಹೇಳಲಾಗಿದೆ.

Actor Shahrukh Khan
Actor Shahrukh Khan

ವರದಿಗಳ ಪ್ರಕಾರ, ನಟ ಶಾರುಖ್ ಖಾನ್ ಜುಲೈ 29ರಂದು ಶಸ್ತ್ರಚಿಕಿತ್ಸೆಗಾಗಿ ಮುಂಬೈನ ಆಸ್ಪತ್ರೆಗೆ ಹೋಗಿದ್ದರು. ಆದರೆ, ಚಿಕಿತ್ಸೆಯು ಯೋಜಿಸಿದಂತೆ ನಡೆಯಲಿಲ್ಲ. ಹಾಗಾಗಿ ಅವರು ವಿದೇಶದಲ್ಲಿ ಹೆಚ್ಚಿನ ಚಿಕಿತ್ಸೆ ಪಡೆಯಲಿದ್ದಾರೆ ಎನ್ನಲಾಗಿದೆ. ಆದರೆ ಶಾರುಖ್ ಮ್ಯಾನೇಜರ್ ಪೂಜಾ ದದ್ಲಾನಿ ಈ ಸುದ್ದಿಯನ್ನು ದೃಢಪಡಿಸಿಲ್ಲ.
ಈ ವರ್ಷದ ಆರಂಭದಲ್ಲಿ, ನಟ ಶಾರುಖ್ ಖಾನ್ ಅವರನ್ನು ಹೀಟ್ ಸ್ಟ್ರೋಕ್ ಮತ್ತು ನಿರ್ಜಲೀಕರಣದಿಂದಾಗಿ ಗುಜರಾತ್‍ನ ಅಹಮದಾಬಾದ್‍ನ ಆಸ್ಪತ್ರೆಗೆ ದಾಖಲಿಸಲಾಗಿತ್ತು. ನರೇಂದ್ರ ಮೋದಿ ಸ್ಟೇಡಿಯಂನಲ್ಲಿ ನಡೆದ ಐಪಿಎಲ್ (ಇಂಡಿಯನ್ ಪ್ರೀಮಿಯರ್ ಲೀಗ್) ಸಮಯದಲ್ಲಿ ತಮ್ಮ ತಂಡ ಕೋಲ್ಕತಾ ನೈಟ್ ರೈಡರ್ಸ್ ಅನ್ನು ಬೆಂಬಲಿಸಲು ಅವರು ಅಲ್ಲಿದ್ದಿದ್ದರು.

Actor Shahrukh Khan
Actor Shahrukh Khan

ಈ ಹಿಂದೆ 2014ರಲ್ಲಿ ಶಾರುಖ್ ತಮ್ಮ ದೃಷ್ಟಿಯನ್ನು ಸರಿಪಡಿಸಲು ಸಣ್ಣ ಕಣ್ಣಿನ ಶಸ್ತ್ರಚಿಕಿತ್ಸೆಗೆ ಒಳಗಾಗಿದ್ದರು. ಶಸ್ತ್ರಚಿಕಿತ್ಸೆಯ ನಂತರ ಅವರು ತಮ್ಮ ಸೋಶಿಯಲ್ ಮೀಡಿಯಾ ಪೇಜ್‍ನಲ್ಲಿ ವೈದ್ಯರಿಗೆ ಧನ್ಯವಾದ ತಿಳಿಸಿದ್ದರು. ತಮ್ಮ ಶಸ್ತ್ರಚಿಕಿತ್ಸೆಯನ್ನು ಮಾಡಿದ್ದಕ್ಕಾಗಿ ಡಾ. ಬುರ್ಜೋರ್ ಬನಾಜಿ ಮತ್ತು ಅವರ ಪತ್ನಿಗೆ ಧನ್ಯವಾದ ತಿಳಿಸಿದ್ದರು. ಈ ಶಸ್ತ್ರಚಿಕಿತ್ಸೆಯಿಂದ ತಮ್ಮ ದೃಷ್ಟಿ ಸರಿಯಾಗಿರುವುದಾಗಿ ತಿಳಿಸಿದ್ದರು.

ಇದನ್ನೂ ಓದಿ: ವಿಚ್ಛೇದನದ ಬಳಿಕ ಪತ್ನಿಗೆ ದುಬಾರಿ ʼಜೀವನಾಂಶʼ ನೀಡಿದ ಬಾಲಿವುಡ್ ಸ್ಟಾರ್‌ಗಳಿವರು!

Actor Shahrukh Khan
Actor Shahrukh Khan

ನಟ ಶಾರುಖ್ ಖಾನ್ ಅವರ ಮುಂದಿನ ಚಿತ್ರ ಆಕ್ಷನ್-ಥ್ರಿಲ್ಲರ್ ಕಿಂಗ್‌ನಲ್ಲಿ ಕಾಣಿಸಿಕೊಳ್ಳಲಿದ್ದಾರೆ, ಇದರಲ್ಲಿ ಅವರ ಮಗಳು ಸುಹಾನಾ ಖಾನ್ ಸಹ ನಟಿಸಲಿದ್ದಾರೆ. ಹಾಗೇ ಅಭಿಷೇಕ್ ಬಚ್ಚನ್ ಕೂಡ ಚಿತ್ರದ ಭಾಗವಾಗಲಿದ್ದು, ಅಲ್ಲಿ ಅವರು ಖಳನಾಯಕನಾಗಿ ನಟಿಸಲಿದ್ದಾರೆ. ಆದರೆ, ಅಧಿಕೃತ ದೃಢೀಕರಣ ನಂತರ ಚಿತ್ರದ ಬಗ್ಗೆ ಮಾಹಿತಿ ಹೊರಬೀಳಲಿದೆ ಎನ್ನಲಾಗಿದೆ. ಮುಂದೆ ನಟ ಶಾರುಖ್ ಖಾನ್ ಅವರು ಆದಿತ್ಯ ಚೋಪ್ರಾ ಅವರ ಟೈಗರ್ ವರ್ಸಸ್ ಪಥನ್ ಚಿತ್ರದಲ್ಲಿ ಖಾನ್ ಪಥನ್ ಪಾತ್ರವನ್ನು ಮಾಡಲಿದ್ದಾರೆ ಎಂಬುದಾಗಿ ತಿಳಿದುಬಂದಿದೆ.

Continue Reading

ದೇಶ

The RajaSaab Movie: ‘ದಿ ರಾಜಾಸಾಬ್’; ಎಲ್ಲರ ಗಮನ ಸೆಳೆಯುತ್ತಿದೆ ರೆಬೆಲ್‌ ಸ್ಟಾರ್‌ ಪ್ರಭಾಸ್‌ ಡ್ಯಾಶಿಂಗ್‌ ಲುಕ್‌!

The RajaSaab Movie: ರೆಬೆಲ್‌ ಸ್ಟಾರ್‌ ಪ್ರಭಾಸ್‌ ಅಭಿನಯದ ಪ್ಯಾನ್‌ ಇಂಡಿಯಾ ಚಿತ್ರ “ದಿ ರಾಜಾಸಾಬ್” ಸಣ್ಣ ಝಲಕ್‌ ಅನ್ನು ಸೋಮವಾರ ಚಿತ್ರತಂಡ ಬಿಡುಗಡೆ ಮಾಡಿದೆ. . ಮಾಸ್‌ ಆಕ್ಷನ್‌ ಶೈಲಿಯ ಸಲಾರ್‌, ಕಲ್ಕಿ ಎಡಿ 2898 ಚಿತ್ರಗಳ ಯಶಸ್ಸಿನ ಬಳಿಕ ಇದೀಗ ಲವರ್‌ ಬಾಯ್‌ ಅವತಾರದಲ್ಲಿ ಅವರು ಕಾಣಿಸಿಕೊಳ್ಳುತ್ತಿದ್ದಾರೆ. ಕಿರು ಗ್ಲಿಂಪ್ಸ್‌‌ನಲ್ಲಿ ಪ್ರಭಾಸ್‌ ಅವರ ಡ್ಯಾಶಿಂಗ್‌ ಲುಕ್‌ ಎಲ್ಲರ ಗಮನ ಸೆಳೆಯುತ್ತಿದೆ. ಗ್ಲಿಂಪ್ಸ್‌ ಜತೆಗೆ ಈ ಸಿನಿಮಾ ಯಾವಾಗ ತೆರೆಗೆ ಬರಲಿದೆ ಎಂಬ ಮಾಹಿತಿಯನ್ನೂ ಚಿತ್ರತಂಡ ಬಿಟ್ಟುಕೊಟ್ಟಿದೆ. ‘ರಾಜಾ ಸಾಬ್’ 2025ರ ಏಪ್ರಿಲ್ 10ರಂದು ಥಿಯೇಟರ್‌ಗಳಲ್ಲಿ ಬಿಡುಗಡೆಯಾಗಲಿದೆ.

VISTARANEWS.COM


on

Rebel star Prabhas starrer The Rajasaab short glimpse released
Koo

ಬೆಂಗಳೂರು: ಗೆಲುವಿನ ಲಯಕ್ಕೆ ಮರಳಿರುವ ಟಾಲಿವುಡ್‌ ನಟ, ರೆಬೆಲ್‌ ಸ್ಟಾರ್‌ ಪ್ರಭಾಸ್‌, ಇದೀಗ ತಮ್ಮ ಮುಂದಿನ ಸಿನಿಮಾದ ಬಗ್ಗೆ ಸಣ್ಣ ಗ್ಲಿಂಪ್ಸ್‌ ಮೂಲಕ ಮತ್ತೆ ಫ್ಯಾನ್ಸ್‌ ಮುಂದೆ ಪ್ರತ್ಯಕ್ಷರಾಗಿದ್ದಾರೆ. ಮಾಸ್‌ ಆಕ್ಷನ್‌ ಶೈಲಿಯ ಸಲಾರ್‌, ಕಲ್ಕಿ ಎಡಿ 2898 ಚಿತ್ರಗಳ ಯಶಸ್ಸಿನ ಬಳಿಕ ಇದೀಗ ಲವರ್‌ ಬಾಯ್‌ ಅವತಾರದಲ್ಲಿ ಅವರು ಕಾಣಿಸಿಕೊಳ್ಳುತ್ತಿದ್ದಾರೆ. ಪ್ಯಾನ್‌ ಇಂಡಿಯಾ ಚಿತ್ರ “ದಿ ರಾಜಾಸಾಬ್” (The RajaSaab Movie) ಸಣ್ಣ ಝಲಕ್‌ ಅನ್ನು ಸೋಮವಾರ ಚಿತ್ರತಂಡ ಬಿಡುಗಡೆ ಮಾಡಿದೆ. ಕಿರು ಗ್ಲಿಂಪ್ಸ್‌‌ನಲ್ಲಿ ಪ್ರಭಾಸ್‌ ಅವರ ಡ್ಯಾಶಿಂಗ್‌ ಲುಕ್‌ ಎಲ್ಲರ ಗಮನ ಸೆಳೆಯುತ್ತಿದೆ.

ಗ್ಲಿಂಪ್ಸ್‌ ಜತೆಗೆ ಈ ಸಿನಿಮಾ ಯಾವಾಗ ತೆರೆಗೆ ಬರಲಿದೆ ಎಂಬ ಮಾಹಿತಿಯನ್ನೂ ಚಿತ್ರತಂಡ ಬಿಟ್ಟುಕೊಟ್ಟಿದೆ. ‘ರಾಜಾ ಸಾಬ್’ 2025ರ ಏಪ್ರಿಲ್ 10ರಂದು ಥಿಯೇಟರ್‌ಗಳಲ್ಲಿ ಬಿಡುಗಡೆಯಾಗಲಿದೆ. ಬರೀ ತೆಲುಗಿನಲ್ಲಷ್ಟೇ ಅಲ್ಲದೆ, ತಮಿಳು, ಕನ್ನಡ, ಮಲಯಾಳಂ ಮತ್ತು ಹಿಂದಿಯಲ್ಲಿಯೂ ರಾಜಾಸಾಬ್‌ ಸಿನಿಮಾ ಬಿಡುಗಡೆ ಆಗಲಿದೆ. ಹಾಗಾದರೆ, ಇದ್ಯಾವ ರೀತಿಯ ಸಿನಿಮಾ? ರೋಮ್ಯಾಂಟಿಕ್ ಹಾರರ್ ಕಾಮಿಡಿಯಲ್ಲಿ ಪ್ರಭಾಸ್‌ ಎಲ್ಲರನ್ನು ಮೋಡಿ ಮಾಡಲು ಸಿದ್ಧರಾಗಿದ್ದಾರೆ. ನಿರ್ದೇಶಕ ಮಾರುತಿ ಈ ಸಿನಿಮಾ ಮೂಲಕ ಪ್ರಭಾಸ್‌ ಅವರನ್ನು ಇನ್ನಷ್ಟು ಸ್ಟೈಲಿಶ್ ಲುಕ್‌ನಲ್ಲಿ ತೋರಿಸಲಿದ್ದಾರೆ.

ಇದನ್ನೂ ಓದಿ: Paris Olympics 2024 : ಪ್ಯಾರಿಸ್​ ಒಲಿಂಪಿಕ್ಸ್​ನಲ್ಲಿ ಜುಲೈ 30ರಂದು ಭಾರತದ ವೇಳಾಪಟ್ಟಿ ಈ ರೀತಿ ಇದೆ

ಈಗಾಗಲೇ ಶೇ. 40% ಭಾಗದ ಚಿತ್ರೀಕರಣ ಪೂರ್ಣಗೊಂಡಿದೆ. ಆಗಸ್ಟ್ 2ರಿಂದ ಮತ್ತೊಂದು ಹಂತದ ಶೂಟಿಂಗ್‌ ಪ್ರಾರಂಭವಾಗಲಿದೆ. ಎಸ್‌ಎಸ್ ಥಮನ್ ಈ ಸಿನಿಮಾಕ್ಕೆ ಸಂಗೀತ ನೀಡುತ್ತಿದ್ದಾರೆ. ರಾಮ್ ಲಕ್ಷ್ಮಣ್ ಮಾಸ್ಟರ್ಸ್ ಮತ್ತು ಕಿಂಗ್ ಸೊಲೊಮನ್ ಫೈಟ್ ಕೊರಿಯೋಗ್ರಫಿಯನ್ನು ನಿರ್ವಹಿಸುತ್ತಿದ್ದಾರೆ. ಈ ಮೂಲಕ ಭರ್ಜರಿ ಆಕ್ಷನ್‌ ನಿರೀಕ್ಷಿಸಬಹುದಾಗಿದೆ. ಬಾಹುಬಲಿ ಖ್ಯಾತಿಯ ಕಮಲಾ ಕಣ್ಣನ್ ಆರ್.ಸಿ. ವಿಎಫ್‌ಎಕ್ಸ್‌ನ ಉಸ್ತುವಾರಿ ವಹಿಸಿಕೊಂಡಿದ್ದು, ದೊಡ್ಡ ಪರದೆಯ ಮೇಲೆ ದೃಶ್ಯ ಚಮತ್ಕಾರ ನೀಡಲಿದೆ.

ಮಾರುತಿ ನಿರ್ದೇಶನದ ರಾಜಾ ಸಾಬ್‌ ಸಿನಿಮಾವನ್ನು ಪೀಪಲ್ ಮೀಡಿಯಾ ಫ್ಯಾಕ್ಟರಿ ಬ್ಯಾನರ್ ಅಡಿಯಲ್ಲಿ ವಿಶ್ವ ಪ್ರಸಾದ್ ನಿರ್ಮಾಣ ಮಾಡುತ್ತಿದ್ದಾರೆ. ರಾಜಾ ಸಾಬ್ ಪ್ಯಾನ್‌ ಇಂಡಿಯಾ ಮಟ್ಟದಲ್ಲಿ ಒಟ್ಟು ಐದು ಭಾಷೆಗಳಲ್ಲಿ ಬಿಡುಗಡೆಯಾಗಲಿದೆ. ‘ಪ್ರತಿ ರೋಜು ಪಂಡಗʼ, ತೆಲುಗಿನ ಹಾರರ್ ಕಾಮಿಡಿ ‘ಪ್ರೇಮ ಕಥಾ ಚಿತ್ರಂʼ ಮತ್ತು ರೊಮ್ಯಾಂಟಿಕ್ ಕಾಮಿಡಿ ‘ಮಹಾನುಭಾವುಡು’ ಸೇರಿ ಹಲವು ಸೂಪರ್‌ಹಿಟ್‌ಗಳಿಗೆ ಸಿನಿಮಾ ನಿರ್ದೇಶನ ಮಾಡಿದ ಮಾರುತಿ, ಇದೀಗ ರಾಜಾಸಾಬ್‌ ಮೂಲಕ ರೊಮ್ಯಾಂಟಿಕ್ ಹಾರರ್ ಎಂಟರ್ಟೈನರ್ ಜತೆ ಆಗಮಿಸುತ್ತಿದ್ದಾರೆ.

ಇದನ್ನೂ ಓದಿ: Pralhad Joshi: ಟೊಮೆಟೊ ಬೆಲೆ ಸ್ಥಿರತೆಗೆ ಕ್ರಮ; ಕೆಜಿಗೆ 60 ರೂ. ನಿಗದಿ: ಪ್ರಲ್ಹಾದ್‌ ಜೋಶಿ

‘ಕಾರ್ತಿಕೇಯ 2’ ಮತ್ತು ‘ಧಮಾಕಾ’ ಸೇರಿ ಹಲವು ಹಿಟ್‌ ಚಿತ್ರಗಳನ್ನು ಕೊಟ್ಟಿರುವ ಪೀಪಲ್ ಮೀಡಿಯಾ ಫ್ಯಾಕ್ಟರಿ ಬ್ಯಾನರ್‌ ತೆಲುಗು ಚಿತ್ರೋದ್ಯಮದಲ್ಲಿ ಪ್ರಮುಖ ಹೆಸರು. ಇದೀಗ ಬಹುಕೋಟಿ ವೆಚ್ಚದಲ್ಲಿ ರಾಜಾ ಸಾಬ್ ಚಿತ್ರವನ್ನು ಪೀಪಲ್ ಮೀಡಿಯಾ ಫ್ಯಾಕ್ಟರಿ ಅದ್ಧೂರಿಯಾಗಿ, ಎಲ್ಲಿಯೂ ರಾಜಿ ಮಾಡಿಕೊಳ್ಳದೆ ಅದ್ಧೂರಿಯಾಗಿ ನಿರ್ಮಿಸುತ್ತಿದೆ. ಕೋಟಗಿರಿ ವೆಂಕಟೇಶ್ವರ ರಾವ್ ಈ ಚಿತ್ರಕ್ಕೆ ಸಂಕಲನ ಮಾಡಿದರೆ, ಕಾರ್ತಿಕ್ ಪಳನಿ ಅವರ ಛಾಯಾಗ್ರಹಣ ಈ ಚಿತ್ರಕ್ಕಿದೆ. ಸಂಗೀತವನ್ನು ಎಸ್‌ಎಸ್‌ ಥಮನ್ ಮಾಡಿದರೆ, ರಾಮ್ ಲಕ್ಷ್ಮಣ್ ಮತ್ತು ಕಿಂಗ್ ಸೊಲೊಮನ್ ಸವರ ಸಾಹಸ ಈ ಚಿತ್ರಕ್ಕಿರಲಿದೆ.

Continue Reading

Latest

Bollywood Divorce Case: ವಿಚ್ಛೇದನದ ಬಳಿಕ ಪತ್ನಿಗೆ ದುಬಾರಿ ʼಜೀವನಾಂಶʼ ನೀಡಿದ ಬಾಲಿವುಡ್ ಸ್ಟಾರ್‌ಗಳಿವರು!

Bollywood Divorce Case: ಮದುವೆ ಎನ್ನುವುದು ಮಧುರವಾದ ಬಂಧ, ಸತಿ-ಪತಿಯರಿಬ್ಬರೂ ಸುಖವಾಗಿ ಬಾಳಿ ಬದುಕಿದರೆ ಜೀವನವೇ ಸ್ವರ್ಗ.ಆದರೆ ಈಗ ಮದುವೆಯಾಗಿ ಮೂರೇ ನಿಮಿಷಕ್ಕೆ ವಿಚ್ಛೇದನ ನೀಡುವವರು ಇದ್ದಾರೆ. ವಿಚ್ಛೇದನದ ಪಾರ್ಟಿಯನ್ನು ಆಚರಿಸುವವರು ಇದ್ದಾರೆ. ಇನ್ನು ಸಿನಿಮಾ ರಂಗದಲ್ಲಂತೂ ಇದನ್ನು ಕೇಳುವುದೇ ಬೇಡ. ಮದುವೆಯಾದ ಸಂಗಾತಿಯೊಂದಿಗೆ ದೀರ್ಘಕಾಲದವರೆಗೆ ಸಂಬಂಧದಲ್ಲಿದ್ದ ಸಿನಿಮಾ ತಾರೆಯರು ಬೆರಳೆಣಿಕೆಯಷ್ಟು ಮಾತ್ರ ಎನ್ನಬಹುದೇನೋ. ಬಾಲಿವುಡ್ ಸಿನಿಮಾ ತಾರೆಯರಲ್ಲಿ ಹಲವರು ಮದುವೆ ಆಗಿ ಸ್ವಲ್ಪ ದಿನದಲ್ಲೇ ವಿಚ್ಛೇದನ ಪಡೆದು ಪತ್ನಿಗೆ ಅತಿ ಹೆಚ್ಚು ಜೀವನಾಂಶ ನೀಡುವ ಮೂಲಕ ಮನೆಮಾತಾಗಿದ್ದಾರೆ. ಅಂತಹ ಬಾಲಿವುಡ್ ಸಿನಿಮಾ ತಾರೆಯರ ಬಗ್ಗೆ ಇಲ್ಲಿದೆ ನೋಡಿ ಮಾಹಿತಿ.

VISTARANEWS.COM


on

Bollywood Divorce Case
Koo

ಮುಂಬೈ: ಈಗಿನ ಕಾಲದಲ್ಲಿ ಲವ್, ಬ್ರೇಕ್ ಅಪ್, ಮದುವ , ವಿಚ್ಛೇದನ ಎಲ್ಲಾ ಕಾಮನ್ ಆಗಿ ಬಿಟ್ಟಿದೆ. ಲವ್ ಮಾಡಿ ಮದುವೆಯಾಗಿ ನಂತರ ಕೆಲವೇ ದಿನಗಳಲ್ಲಿ ವಿಚ್ಛೇದನ ನೀಡುವುದು ಸೆಲೆಬ್ರಿಟಿಗಳಲ್ಲಿ ಸಾಮಾನ್ಯ. ಆದರೆ ಈಗ ಸಾಮಾನ್ಯ ಜನರೂ ಇದೇ ನಿಯಮವನ್ನು ಅನುಸರಿಸುತ್ತಿದ್ದಾರೆ! ಮದುವೆಯಾದ ಸಂಗಾತಿಯೊಂದಿಗೆ ದೀರ್ಘಕಾಲದವರೆಗೆ ಸಂಬಂಧದಲ್ಲಿದ್ದ ಸಿನಿಮಾ ತಾರೆಯರು ಬೆರಳೆಣಿಕೆಯಷ್ಟು ಮಾತ್ರ! ಬಾಲಿವುಡ್ (Bollywood Divorce Case) ಸಿನಿಮಾ ತಾರೆಯರಲ್ಲಿ ಹಲವರು ಮದುವೆ ಆಗಿ ಸ್ವಲ್ಪ ದಿನದಲ್ಲೇ ವಿಚ್ಛೇದನ ಪಡೆದು ಪತ್ನಿಗೆ ಅತಿ ಹೆಚ್ಚು ಜೀವನಾಂಶ ನೀಡುವ ಮೂಲಕ ಸುದ್ದಿಯಾಗಿದ್ದಾರೆ. ಅಂತಹ ಬಾಲಿವುಡ್ ಸಿನಿಮಾ ತಾರೆಯರ ಬಗ್ಗೆ ಇಲ್ಲಿದೆ ಕುತೂಹಲಕರ ಮಾಹಿತಿ.

Bollywood Divorce Case
Bollywood Divorce Case

ಹೃತಿಕ್ ರೋಷನ್- ಸುಸ್ಸೇನ್ ಖಾನ್

ಬಾಲಿವುಡ್‌ನ ʼಗ್ರೀಕ್ ದೇವರುʼ ಎಂದೇ ಕರೆಯಲ್ಪಡುವ ಹೃತಿಕ್ ರೋಷನ್ 2000ರಲ್ಲಿ ಪ್ರಸಿದ್ಧ ಇಂಟಿರಿಯರ್ ಡಿಸೈನರ್ ಸುಸ್ಸೇನ್ ಖಾನ್ ಅವರನ್ನು ವಿವಾಹವಾದರು. ಹೊರಗಿನವರಿಗೆ ಸುಂದರವಾಗಿ ಕಾಣುತ್ತಿದ್ದ ಇವರ ವೈವಾಹಿಕ ಜೀವನವು 2014ರಲ್ಲಿ ಕೊನೆಗೊಂಡಿತು. ಇವರ ವಿಚ್ಛೇದನ ಒಪ್ಪಂದವು ಬಾಲಿವುಡ್ ಇತಿಹಾಸದಲ್ಲೇ ಅತ್ಯಂತ ದುಬಾರಿಯಾಗಿತ್ತು. ಯಾಕೆಂದರೆ ಹೃತಿಕ್ ರೋಷನ್‌ ಅವರು ಸುಸ್ಸೇನ್‌ಗೆ ಸುಮಾರು 380 ಕೋಟಿ ರೂ. ಜೀವನಾಂಶ ಪಾವತಿಸಿದ್ದಾರೆ ಎಂದು ವರದಿಯಾಗಿದೆ.

Bollywood Divorce Case
Bollywood Divorce Case

ಕರಿಷ್ಮಾ ಕಪೂರ್ ಮತ್ತು ಸಂಜಯ್ ಕಪೂರ್

ಕಪೂರ್ ಕುಟುಂಬದ ವಂಶಸ್ಥರಾದ ಕರಿಷ್ಮಾ ಕಪೂರ್ 2003ರಲ್ಲಿ ಉದ್ಯಮಿ ಸಂಜಯ್ ಕಪೂರ್ ಅವರನ್ನು ವಿವಾಹವಾದರು. ಇವರ ವೈವಾಹಿಕ ಜೀವನದಲ್ಲಿ ಸಮಸ್ಯೆಗಳು ಎದುರಾದ ಹಿನ್ನಲೆಯಲ್ಲಿ ಇವರು 2014ರಲ್ಲಿ ಬೇರೆಬೇರೆಯಾದರು. ಕರಿಷ್ಮಾ ಅವರಿಗೆ ಸಂಜಯ್ ಜೀವನಾಂಶವಾಗಿ 14 ಕೋಟಿ ರೂ. ಬಾಂಡ್, ಮುಂಬೈನಲ್ಲಿ ಐಷಾರಾಮಿ ಮನೆ ಮತ್ತು ಅವರ ಮಕ್ಕಳ ಜೀವನಕ್ಕಾಗಿ ಹಣವನ್ನು ಪಾವತಿಸಿದ್ದಾರೆ ಎಂದು ವರದಿಗಳು ತಿಳಿಸಿವೆ.

Bollywood Divorce Case
Bollywood Divorce Case

ಸೈಫ್ ಅಲಿ ಖಾನ್ ಮತ್ತು ಅಮೃತಾ ಸಿಂಗ್

ನಟ ಸೈಫ್ ಅಲಿ ಖಾನ್ 1991ರಲ್ಲಿ ನಟಿ ಅಮೃತಾ ಸಿಂಗ್ ಅವರನ್ನು ವಿವಾಹವಾದರು. ಈ ದಂಪತಿಗೆ ಸಾರಾ ಮತ್ತು ಇಬ್ರಾಹಿಂ ಎಂಬ ಇಬ್ಬರು ಮಕ್ಕಳಿದ್ದರು. ಹದಿಮೂರು ವರ್ಷಗಳ ದಾಂಪತ್ಯದ ನಂತರ, ಅವರು 2004ರಲ್ಲಿ ವಿಚ್ಛೇದನ ಪಡೆದರು. ಸೈಫ್ ಅಮೃತಾಗೆ ಜೀವನಾಂಶವಾಗಿ 5 ಕೋಟಿ ರೂ.ಗಳನ್ನು ಪಾವತಿಸಿದ್ದಾರೆ ಎಂದು ವರದಿಯಾಗಿದೆ. ಅಲ್ಲದೇ ಹೆಚ್ಚುವರಿಯಾಗಿ, ತಮ್ಮ ಮಗ ಪ್ರೌಢಾವಸ್ಥೆಗೆ ತಲುಪುವವರೆಗೆ ತಿಂಗಳಿಗೆ 1 ಲಕ್ಷ ರೂ.ಗಳನ್ನು ಪಾವತಿಸಲು ಅವರು ಬದ್ಧರಾಗಿದ್ದಾರೆ.

Bollywood Divorce Case
Bollywood Divorce Case

ಅಮೀರ್ ಖಾನ್ ಮತ್ತು ರೀನಾ ದತ್ತಾ

ಅಮೀರ್ ಖಾನ್ 1986ರಲ್ಲಿ ರೀನಾ ದತ್ತಾ ಅವರನ್ನು ವಿವಾಹವಾದರು. ಈ ದಂಪತಿಗೆ ಇಬ್ಬರು ಮಕ್ಕಳಿದ್ದರು. 2002ರಲ್ಲಿ ಅವರ ವಿವಾಹವು ಕೊನೆಗೊಂಡಿದೆ. ವಿಚ್ಛೇದನ ನಂತರ ತಮ್ಮ ಮಕ್ಕಳ ಭವಿಷ್ಯವನ್ನು ರೂಪಿಸಲು ರೀನಾಗೆ ಸುಮಾರು 50 ಕೋಟಿ ರೂ.ಗಳನ್ನು ನೀಡಿರುವುದಾಗಿ ಅಮೀರ್ ಖಾನ್ ಖಚಿತಪಡಿಸಿದ್ದಾರೆ.

Bollywood Divorce Case
Bollywood Divorce Case

ಫರ್ಹಾನ್ ಅಖ್ತರ್ ಮತ್ತು ಅಧುನಾ ಭಬಾನಿ

ಬಹುಮುಖ ಪ್ರತಿಭೆಯ ನಟ, ನಿರ್ದೇಶಕ ಮತ್ತು ನಿರ್ಮಾಪಕ ಫರ್ಹಾನ್ ಅಖ್ತರ್ 2000ರಲ್ಲಿ ಸೆಲೆಬ್ರಿಟಿ ಹೇರ್ಸ್ಟೈಲಿಸ್ಟ್ ಅಧುನಾ ಭಬಾನಿ ಅವರನ್ನು ವಿವಾಹವಾದರು. ಹದಿನಾರು ವರ್ಷಗಳ ದಾಂಪತ್ಯದ ನಂತರ, ಅವರು 2016ರಲ್ಲಿ ವಿಚ್ಛೇದನ ಪಡೆದಿದ್ದಾರೆ. ಹಾಗೇ ಪತ್ನಿಗೆ ದುಬಾರಿ ಜೀವನಾಂಶದ ಜೊತೆಗೆ ಬಂಗಲೆ ಮತ್ತು ಅವರ ಇಬ್ಬರು ಹೆಣ್ಣುಮಕ್ಕಳ ಖರ್ಚುವೆಚ್ಚದ ಜವಾಬ್ದಾರಿಯನ್ನು ತಾವೇ ತೆಗೆದುಕೊಂಡಿದ್ದಾರೆ.

Bollywood Divorce Case
Bollywood Divorce Case

ಸಂಜಯ್ ದತ್ ಮತ್ತು ರಿಯಾ ಪಿಳ್ಳೈ

ರೂಪದರ್ಶಿ ರಿಯಾ ಪಿಳ್ಳೈ ಅವರೊಂದಿಗಿನ ಸಂಜಯ್ ದತ್ ಅವರ ಎರಡನೇ ಮದುವೆಯಾದರು. 2008ರಲ್ಲಿ ಇವರ ವೈವಾಹಿಕ ಜೀವನ ವಿಚ್ಛೇದನದಲ್ಲಿ ಕೊನೆಗೊಂಡಿತು ಸಂಜಯ್ ರಿಯಾಗೆ ದುಬಾರಿ ಜೀವನಾಂಶವನ್ನು ಪಾವತಿಸಿದ್ದಾರೆ ಎಂದು ವರದಿಗಳು ತಿಳಿಸಿವೆ. ಅದರಲ್ಲಿ ಮುಂಬೈನಲ್ಲಿ ಸಮುದ್ರದ ಕಡೆಗೆ ಮುಖವಿದ್ದ ಎರಡು ಐಷಾರಾಮಿ ಅಪಾರ್ಟ್ಮೆಂಟ್‍ಗಳು ಮತ್ತು ಒಂದು ಕಾರನ್ನು ನೀಡಲಾಗಿದೆ.

ಇದನ್ನೂ ಓದಿ: 20 ದೇಶಗಳಿಗೆ ಮಣ್ಣಿನ ಪಾತ್ರೆಗಳ ರಫ್ತು; ವರ್ಷಕ್ಕೆ 5 ಕೋಟಿ ರೂ. ಗಳಿಸುತ್ತಿದೆ ಈ ಕುಟುಂಬ!

Bollywood Divorce Case
Bollywood Divorce Case

ಅರ್ಬಾಜ್ ಖಾನ್ ಮತ್ತು ಮಲೈಕಾ ಅರೋರಾ

ನಟ-ನಿರ್ಮಾಪಕ ಮತ್ತು ಸಲ್ಮಾನ್ ಖಾನ್ ಅವರ ಕಿರಿಯ ಸಹೋದರ ಅರ್ಬಾಜ್ ಖಾನ್ ನಟಿ ಮತ್ತು ರೂಪದರ್ಶಿ ಮಲೈಕಾ ಅರೋರಾ ಅವರನ್ನು 1998ರಲ್ಲಿ ವಿವಾಹವಾದರು. ಸ್ಟೈಲಿಶ್ ನೋಟಗಳಿಗೆ ಹೆಸರುವಾಸಿಯಾದ ದಂಪತಿಗಳು 2016ರಲ್ಲಿ ತಮ್ಮ ವಿಚ್ಛೇದನವನ್ನು ಘೋಷಿಸಿದರು ಮತ್ತು 2017ರಲ್ಲಿ ಅಧಿಕೃತವಾಗಿ ವಿಚ್ಛೇದನವನ್ನು ಪಡೆದುಕೊಂಡರು. ಈ ಒಪ್ಪಂದದಲ್ಲಿ ಅರ್ಬಾಜ್ ಮಲೈಕಾಗೆ ಸುಮಾರು 10-15 ಕೋಟಿ ರೂ.ಗಳ ದುಬಾರಿ ಜೀವನಾಂಶವನ್ನು ನೀಡಿದ್ದಾರೆ ಮತ್ತು ಅವರ ಮಗ ಅರ್ಹಾನ್ ಅವರ ಸಂಪೂರ್ಣ ಖರ್ಚುವೆಚ್ಚವನ್ನು ನೋಡಿಕೊಳ್ಳುವುದಾಗಿ ವರದಿಯಾಗಿದೆ.

Continue Reading
Advertisement
Kenchanala Marikamba Jatra
ಶಿವಮೊಗ್ಗ2 mins ago

Shivamogga News: ವಿಜೃಂಭಣೆಯಿಂದ ನಡೆದ ಕೆಂಚನಾಲ ಮಾರಿಕಾಂಬಾ ಜಾತ್ರೆ

Aryan Khan
ಸಿನಿಮಾ7 mins ago

Aryan Khan: ದಿಲ್ಲಿಯ ಸಣ್ಣ ಮನೆಯಲ್ಲಿದ್ದ ಶಾರುಖ್‌ ದಂಪತಿ; ಅಲ್ಲಿನ ಬಂಗಲೆಯನ್ನು 37 ಕೋಟಿ ರೂ.ಗೆ ಖರೀದಿಸಿದ ಪುತ್ರ!

IND vs SL
ಪ್ರಮುಖ ಸುದ್ದಿ10 mins ago

IND vs SL : ಭಾರತ ವಿರುದ್ಧದ ಏಕ ದಿನ ಸರಣಿಗೆ ಶ್ರೀಲಂಕಾ ತಂಡ ಪ್ರಕಟ; ಹೊಸ ನಾಯಕನ ಘೋಷಣೆ

ಪ್ರಮುಖ ಸುದ್ದಿ15 mins ago

Wayanad Landslide: ಕೇರಳದಲ್ಲಿ ರಕ್ಷಣೆ, ಪರಿಹಾರ ಕಾರ್ಯಾಚರಣೆಗೆ ಇಬ್ಬರು IAS ಅಧಿಕಾರಿಗಳನ್ನು ನಿಯೋಜಿಸಿದ ಸಿಎಂ ಸಿದ್ದರಾಮಯ್ಯ

Star Saree Styling Tips
ಫ್ಯಾಷನ್15 mins ago

Star Saree Styling Tips: ಎಂಬ್ರಾಯ್ಡರಿ ಸೀರೆಯಲ್ಲಿ ನಟಿ ರಶ್ಮಿಕಾ ಮಂದಣ್ಣರಂತೆ ಕಾಣಿಸಬೇಕೇ? ಈ 5 ಟಿಪ್ಸ್ ಫಾಲೋ ಮಾಡಿ

karnataka Weather Forecast
ಮಳೆ17 mins ago

Karnataka Weather : ಮುಂದಿನ 24 ಗಂಟೆಯಲ್ಲಿ ಭಾರಿ ಮಳೆ; ಮಲೆನಾಡಿನ ಶಾಲಾ-ಕಾಲೇಜು ರಜೆ

Love Jihad
ದೇಶ29 mins ago

Love Jihad: ಲವ್‌ ಜಿಹಾದ್‌ ವಿರುದ್ಧ ಯೋಗಿ ದಿಟ್ಟ ಕ್ರಮ; ಇನ್ನು ಜಿಹಾದಿಗಳಿಗೆ ಜೀವಾವಧಿ ಶಿಕ್ಷೆ ಗ್ಯಾರಂಟಿ!

Tata Motors launched two programs Vidyadhana and Utkarsha to facilitate higher education of technician children
ವಾಣಿಜ್ಯ30 mins ago

Tata Motors: ಮಕ್ಕಳ ಉನ್ನತ ಶಿಕ್ಷಣಕ್ಕೆ ನೆರವಾಗಲು ಟಾಟಾ ಮೋಟಾರ್ಸ್‌ನಿಂದ ‘ವಿದ್ಯಾಧನ’, ‘ಉತ್ಕರ್ಷ’ ಯೋಜನೆ

ಕರ್ನಾಟಕ38 mins ago

Wayanad Landslide: ಕೇರಳ ಭೂ ಕುಸಿತ; ಕರ್ನಾಟಕದಲ್ಲೂ ಕಟ್ಟೆಚ್ಚರ ವಹಿಸಲು ಸರ್ಕಾರಕ್ಕೆ ಎಚ್‌ಡಿಕೆ ಸಲಹೆ

Custard Apple Benefits
Latest1 hour ago

Custard Apple Benefits: ಕ್ಯಾನ್ಸರ್‌ ಸೇರಿದಂತೆ ಹಲವು ರೋಗಗಳನ್ನು ತಡೆಯುವ ಶಕ್ತಿ ಸೀತಾಫಲಕ್ಕಿದೆ!

Sharmitha Gowda in bikini
ಕಿರುತೆರೆ10 months ago

Geetha Serial Kannada: ನಿದ್ದೆ ಕದ್ದ ಚೋರಿ! ನಟಿ `ಭಾನುಮತಿ’ ಹಾಟ್‌ ಪೋಟೊಗಳಿಗೆ ಫ್ಯಾನ್ಸ್ ಫುಲ್ ಫಿದಾ

Kannada Serials
ಕಿರುತೆರೆ10 months ago

Kannada Serials TRP: 2ನೇ ಸ್ಥಾನದಲ್ಲಿ 2 ಧಾರಾವಾಹಿಗಳು; ಟಿಆರ್‌ಪಿ ರೇಸ್‌ನಲ್ಲಿಲ್ಲ ಭಾಗ್ಯಲಕ್ಷ್ಮೀ!

Bigg Boss- Saregamapa 20 average TRP
ಕಿರುತೆರೆ10 months ago

Kannada Serials TRP: ಏಳನೇ ಸ್ಥಾನಕ್ಕೆ ʻಅಮೃತಧಾರೆʼ ಕುಸಿತ; ಬಿಗ್‌ ಬಾಸ್‌-ಸರಿಗಮಪ ಟಿಆರ್‌ಪಿ ಎಷ್ಟು?

galipata neetu
ಕಿರುತೆರೆ8 months ago

Kanyadana Serial: ಕಿರುತೆರೆಗೆ ಮತ್ತೆ ಎಂಟ್ರಿ ಕೊಟ್ಟ ʻಗಾಳಿಪಟʼ ಖ್ಯಾತಿಯ ʻನೀತುʼ!

Kannada Serials
ಕಿರುತೆರೆ10 months ago

Kannada Serials TRP: ನಾಲ್ಕನೇ ಸ್ಥಾನಕ್ಕೆ ಕುಸಿತ ಕಂಡ ʻಸೀತಾ ರಾಮʼ; ಟಿಆರ್‌ಪಿ ರೇಸ್‌ಗೆ ʻಭಾಗ್ಯಲಕ್ಷ್ಮಿʼ ಬ್ಯಾಕ್‌!

Kannada Serials
ಕಿರುತೆರೆ10 months ago

Kannada Serials TRP: ಟಿಆರ್‌ಪಿಯಲ್ಲಿ ʻಭಾಗ್ಯಲಕ್ಷ್ಮೀʼ ಹವಾ; ʻಪುಟ್ಟಕ್ಕನ ಮಕ್ಕಳುʼ ಧಾರಾವಾಹಿಗೆ ಸಂಕಷ್ಟ!

Bigg Boss' dominates TRP; Sita Rama fell to the sixth position
ಕಿರುತೆರೆ9 months ago

Kannada Serials TRP: ಟಿಆರ್‌ಪಿಯಲ್ಲಿ ʻಬಿಗ್ ಬಾಸ್ʼದೇ ಮೇಲುಗೈ; 6ನೇ ಸ್ಥಾನಕ್ಕೆ ಕುಸಿದ ʻಸೀತಾ ರಾಮʼ

geetha serial Dhanush gowda engagement
ಕಿರುತೆರೆ8 months ago

Dhanush Gowda: ಗೀತಾ ಧಾರಾವಾಹಿ ನಟನ ನಿಶ್ಚಿತಾರ್ಥ; ಭವ್ಯಾಳ ಕಮೆಂಟ್‌ ಬಾಕ್ಸ್‌ ಆಫ್‌!

varun
ಕಿರುತೆರೆ8 months ago

Brindavana Serial: ʼಬೃಂದಾವನʼ ಧಾರಾವಾಹಿಯಲ್ಲಿ ದೊಡ್ಡ ಟ್ವಿಸ್ಟ್‌; ಪ್ರಮುಖ ಪಾತ್ರಧಾರಿಯೇ ಬದಲು

Kannada Serials
ಕಿರುತೆರೆ11 months ago

Kannada Serials TRP: ಟಿಆರ್‌ಪಿಯಲ್ಲಿ ಏರಿಕೆ ಕಂಡ ʻಅಮೃತಧಾರೆʼ; ʻಗಟ್ಟಿಮೇಳʼಕ್ಕೆ ನಾಲ್ಕನೇ ಸ್ಥಾನ!

karnataka Rain
ಮಳೆ2 hours ago

Karnataka rain : ಭದ್ರಾ ನದಿಯಲ್ಲಿ ಕೊಚ್ಚಿ ಹೋದ ಹಸು; ಬೈಂದೂರಿನಲ್ಲಿ ಬೃಹತ್ ಗಾತ್ರದ ಮೊಸಳೆ ಪ್ರತ್ಯಕ್ಷ

Karnataka Rain
ಮಳೆ6 hours ago

Karnataka Rain : ಭಾರಿ ಮಳೆಗೆ ಬಾಳೆಹೊನ್ನೂರು ಮುಳುಗಡೆ; ನೆರೆಗೆ ಬೋಟ್‌ ಮೊರೆ ಹೋದ ಜನರು

Bharachukki falls
ಚಾಮರಾಜನಗರ7 hours ago

Bharachukki Falls : ಭರಚುಕ್ಕಿ ಜಲಪಾತಕ್ಕೆ ಕಳ್ಳ ಮಾರ್ಗದಿಂದ ಹೋದೋರಿಗೆ ಬಸ್ಕಿ ಹೊಡೆಸಿದ ಪೊಲೀಸರು!

karnataka Rain
ಮಳೆ1 day ago

Karnataka Rain: ಮತ್ತೆ ಶುರು ಮಳೆ ಅಬ್ಬರ; ಗಾಳಿಗೆ ಹಾರಿ ಹೋದ ಮನೆಗಳ ಚಾವಣಿ, ಶಿರಾಡಿಘಾಟ್‌ನಲ್ಲಿ ಮತ್ತೆ ಭೂ ಕುಸಿತ

Elephant combing Makna elephant captured near Bannerghatta
ಬೆಂಗಳೂರು ಗ್ರಾಮಾಂತರ1 day ago

Elephant combing: ಭೀಮ, ಮಹೇಂದ್ರರ ಮುಂದೆ ಮಂಡಿಯೂರಿದ ಮಕ್ನಾ ಆನೆ; ಹೇಗಿತ್ತು ಗೊತ್ತಾ ಕಾರ್ಯಾಚರಣೆ

karnataka rain
ಮಳೆ1 day ago

Karnataka rain: ಪ್ರವಾಹದ ಭೀಕರತೆ; ಹಳ್ಳದಲ್ಲಿ ತೇಲಿಬಂದ ಎಮ್ಮೆಗಳ ಕಳೇಬರ

Tungabhadra Dam
ಕೊಪ್ಪಳ2 days ago

Tungabhadra Dam: ಕಾಲುವೆಯಲ್ಲಿ ಬಾಲಕರ ಈಜಾಟ; ಅಧಿಕಾರಿಗಳಿಗೆ ಪೀಕಲಾಟ!

Elephant attack
ಮಳೆ2 days ago

Elephant attack : ಮಳೆ ಮಧ್ಯೆ ಮಲೆನಾಡಿನಲ್ಲಿ ಕಾಡಾನೆಗಳ ಕಾಟ; ಪ್ರವಾಹಕ್ಕೆ ಸಿಲುಕಿದ ಪಟಗುಂದಿ ಗ್ರಾಮ

karnataka Rain
ಮಳೆ2 days ago

Karnataka Rain : ಮಳೆ ನಿಂತರೂ ಕಡಿಮೆಯಾಗದ ಅನಾಹುತ; ಮಾದಪುರ ಟೌನ್ ಸಮೀಪ ಗುಡ್ಡ ಕುಸಿತ

karnataka Rain
ಮಳೆ2 days ago

Karnataka Rain : ರಭಸವಾಗಿ ಬೀಸಿದ ಗಾಳಿಗೆ ಮನೆ ಮೇಲೆ ಬಿದ್ದ ತೆಂಗಿನ ಮರ; ನದಿ ನೀರು ಸೇವಿಸದಂತೆ ಸೂಚನೆ

ಟ್ರೆಂಡಿಂಗ್‌