Dalit CM : ದಲಿತ ಸಿಎಂ ಕೂಗಿಗೆ ಸಿದ್ದರಾಮಯ್ಯ ನಿಷ್ಠ ಸಚಿವರ ಬೆಂಬಲ, ಪ್ಲ್ಯಾನ್‌ ಸ್ಪಷ್ಟ? - Vistara News

ರಾಜಕೀಯ

Dalit CM : ದಲಿತ ಸಿಎಂ ಕೂಗಿಗೆ ಸಿದ್ದರಾಮಯ್ಯ ನಿಷ್ಠ ಸಚಿವರ ಬೆಂಬಲ, ಪ್ಲ್ಯಾನ್‌ ಸ್ಪಷ್ಟ?

Dalit CM : ರಾಜ್ಯದಲ್ಲಿ ದಲಿತ ಸಿಎಂ ಆಗಬೇಕು ಎಂಬ ಎಚ್‌.ಸಿ. ಮಹದೇವಪ್ಪ ಅವರ ಬೇಡಿಕೆಗೆ ಇಬ್ಬರು ಸಚಿವರು ಬೆಂಬಲ ಸೂಚಿಸಿದ್ದಾರೆ. ಅವರಿಬ್ಬರೂ ಸಿಎಂ ಸಿದ್ದರಾಮಯ್ಯ ಅವರಿಗೆ ಆಪ್ತರಾಗಿರುವುದು ವಿಶೇಷವಾಗಿದೆ.

VISTARANEWS.COM


on

Dalit CM Mahadevappa KN Rajanna Satish Jarakiholi
ಮಹತ್ವದ, ಕುತೂಹಲಕರ ಸುದ್ದಿಗಾಗಿ ಫಾಲೊ ಮಾಡಿ
Koo

ತುಮಕೂರು/ಬೆಳಗಾವಿ: ರಾಜ್ಯದಲ್ಲಿ ಎದ್ದಿರುವ ದಲಿತ ಸಿಎಂ (Dalit CM) ಕೂಗಿಗೆ ಇಬ್ಬರು ಪ್ರಮುಖ ಸಚಿವರು ಬೆಂಬಲ ಸೂಚಿಸಿದ್ದಾರೆ. ದಲಿತರು ಕೇವಲ ಮತ ಹಾಕಲು ಸೀಮಿತರಾಗಿದ್ದಾರೆ, ಅವರ ಮತದಿಂದ ಯಾರ್ಯಾರೋ ನಾಯಕರಾಗಿದ್ದಾರೆ. ಅವರಿಗೆ ಸಿಎಂ ಆಗುವ ಅವಕಾಶವಿಲ್ಲವೇ ಎಂಬ ಪ್ರಶ್ನೆಯನ್ನು ಸಮಾಜ ಕಲ್ಯಾಣ ಖಾತೆ ಸಚಿವ ಡಾ.ಎಚ್‌.ಸಿ. ಮಹದೇವಪ್ಪ (Dr HC Mahadevappa) ಎತ್ತಿದ್ದರು. ಅದಕ್ಕೆ ಈಗ ಸಚಿವರಾದ ಕೆ.ಎನ್‌. ರಾಜಣ್ಣ (KN Rajanna) ಮತ್ತು ಸತೀಶ್‌ ಜಾರಕಿಹೊಳಿ (Sathish Jarakiholi) ಬೆಂಬಲ ಸೂಚಿಸಿದ್ದಾರೆ. ಇವರಿಬ್ಬರೂ ಸಿಎಂ ಸಿದ್ದರಾಮಯ್ಯ ಅವರಿಗೆ ಆಪ್ತರಾಗಿರುವುದು ವಿಶೇಷ.

ಡಾ. ಎಚ್‌.ಸಿ. ಮಹದೇವಪ್ಪ ಅವರು ದಲಿತ ಸಿಎಂ ಚರ್ಚೆ ಹುಟ್ಟುಹಾಕಿದ ಸಮಯದ ಬಗ್ಗೆ ಚರ್ಚೆ ನಡೆಯುತ್ತಿದೆ. ಉಪಮುಖ್ಯಮಂತ್ರಿಯಾಗಿರುವ ಡಿ.ಕೆ. ಶಿವಕುಮಾರ್‌ ಅವರು ಹಿಂದಿನಿಂದಲೂ ಈ ಹುದ್ದೆಯ ಆಕಾಂಕ್ಷಿಯಾಗಿದ್ದಾರೆ. ಎರಡೂವರೆ ವರ್ಷದ ಬಳಿಕ ಅವರಿಗೆ ಸಿಎಂ ಹುದ್ದೆ ಬಿಟ್ಟು ಕೊಡಬೇಕು ಎಂಬ ಒಪ್ಪಂದವಾಗಿದೆ ಎಂದು ಹೇಳಲಾಗುತ್ತಿದೆ.

ಈ ನಡುವೆ, ಡಿ.ಕೆ. ಶಿವಕುಮಾರ್‌ ಅವರಿಗೆ ಜಾರಿ ನಿರ್ದೇಶನಾಲಯದ ಪ್ರಕರಣದಿಂದ ಕ್ಲೀನ್‌ ಚಿಟ್‌ ಸಿಕ್ಕಿದೆ. ಹೀಗಾಗಿ ಅವರು ಸಿಎಂ ಹುದ್ದೆಗೆ ಪ್ರಬಲವಾಗಿ ವಾದ ಮಂಡಿಸಬಹುದು ಎಂಬ ಸೂಚನೆಯ ಹಿನ್ನೆಲೆಯಲ್ಲಿ ಅದನ್ನು ತಪ್ಪಿಸುವುದಕ್ಕಾಗಿ ದಲಿತ ಸಿಎಂ ಮಂತ್ರ ಪಠಿಸಲಾಗುತ್ತಿದೆ ಎಂದು ಹೇಳಲಾಗುತ್ತಿದೆ. ಒಂದು ವೇಳೆ ಸಿಎಂ ಬದಲಾವಣೆ ಮಾಡುವುದಿದ್ದರೆ ದಲಿತರನ್ನು ಮಾಡಿ ಎಂಬ ಹಕ್ಕೊತ್ತಾಯದ ಮೂಲಕ ಡಿ.ಕೆ. ಶಿವಕುಮಾರ್‌ ಬಣದ ದಿಕ್ಕೆಡಿಸುವುದು ಉದ್ದೇಶ ಎನ್ನಲಾಗುತ್ತಿದೆ. ಅದಕ್ಕೆ ಪೂರಕವಾಗಿ ಈ ಚರ್ಚೆಗಳೆಲ್ಲವೂ ಸಿದ್ದರಾಮಯ್ಯ ಅವರ ಆಪ್ತರ ಕಡೆಯಿಂದಲೇ ನಡೆಯುತ್ತಿವೆ.

Dalit CM : ಮಹದೇವಪ್ಪ ಮಾತಿಗೆ ದನಿಗೂಡಿಸಿದ ಸಚಿವ ಕೆ.ಎನ್.ರಾಜಣ್ಣ

ತುಮಕೂರಿನಲ್ಲಿ ಮಾತನಾಡಿದ ಸಚಿವ ಕೆ.ಎನ್‌. ರಾಜಣ್ಣ ಅವರು ಸಿದ್ದರಾಮಯ್ಯ ಅವರನ್ನು ಬದಲಾಯಿಸುವ ಪರಿಸ್ಥಿತಿ ಬಂದರೆ ಜಿ. ಪರಮೇಶ್ವರ್‌ ಅವರು ಸಿಎಂ ಆಗಬೇಕು ಎನ್ನುವುದು ನನ್ನ ಆಸೆ ಎಂದಿದ್ದಾರೆ.

ʻʻಸಿದ್ದರಾಮಯ್ಯನವರು ಪೂರ್ಣಾವಧಿ ಸಿಎಂ ಆಗಬೇಕು ಅನ್ನೋದು ಬಹುಪಾಲು ಶಾಸಕರ ಅಭಿಪ್ರಾಯ. ಆದರೆ ಒಂದು ವೇಳೆ ಬದಲಾವಣೆ ಮಾಡಬೇಕು ಎಂದು ಹೈ ಕಮಾಂಡ್ ಚಿಂತನೆ ಮಾಡಿದರೆ ಅದು ದಲಿತರ ಆಯ್ಕೆ ಆಗಲಿ. ಅದರಲ್ಲೂ ಜಿ.ಪರಮೇಶ್ವರ್ ಅರ್ಹತೆಯುಳ್ಳವರು. ಸಿಎಂ ಆಗುವ ಎಲ್ಲಾ ಅರ್ಹತೆ ಪರಮೇಶ್ವರ್‌ ಅವರಿಗೆ ಇದೆ. ಅವರು ಸಿಎಂ ಆಗಬೇಕು ಅನ್ನೊದು ನನ್ನ ಅಭಿಲಾಷೆ. ಹಾಗೇ ಡಿ.ಕೆ.ಶಿವಕುಮಾರ್ ಕೂಡ ಸಿಎಂ ಆಗಬಾರದು ಅಂತಲ್ಲ. ಅವರು ಕೂಡ ಆಗಲಿʼʼ ಎಂದು ಹೇಳಿದರು ಕೆ.ಎನ್‌. ರಾಜಣ್ಣ.

ʻʻದಲಿತ ಸಿಎಂ ವಿಚಾರದಲ್ಲಿ ಮಹದೇವಪ್ಪ ಅವರಿಗಿಂತ ಮೊದಲೇ ನಾವು ಪ್ರಸ್ತಾಪ ಮಾಡಿದ್ದೇವೆ. ಈಗ ಚುನಾವಣೆ ಇರೋದ್ರಿಂದ ನಾವು ಇಂಥಹ ವಿಚಾರ ಎತ್ತೋದಿಲ್ಲ. ನಮಗೆ ನಾವೇ ನಿರ್ಬಂಧ ಹಾಕಿಕೊಂಡಿದ್ದೇವೆ. ಹಾಗಂತ ಡಿಕೆ ಶಿವಕುಮಾರ್ ಸಿಎಂ ಆಗಬಾರದು ಎಂದು ನಾವು ಹೇಳೋದಿಲ್ಲ. ಆದರೆ ದಲಿತ ಸಿಎಂ ನಮ್ಮ ಹಕ್ಕು,. ನಮ್ಮ ಹಕ್ಕು ಕೇಳೋದ್ರಲ್ಲಿ ಯಾರ ಆಕ್ಷೇಪ ಇರಬಾರದುʼʼ ಎಂದು ಹೇಳಿದ ಕೆಎನ್‌. ರಾಜಣ್ಣ, ಈಗಿನಿಂದಲೇ ದಲಿತ ಸಿಎಂ ಕೂಗು ಹೊರಹಾಕಿದ್ದರೆ ಯಾವತ್ತೋ ಒಂದು ದಿನ ಯಶಸ್ವಿಯಾಗುತ್ತದೆ. ಬೆಳಗ್ಗೆ ಕೇಳಿದ್ರೆ ಸಂಜೆಗೆ ದಲಿತ ಸಿಎಂ ಕೊಟ್ಟುಬಿಡುತ್ತಾರಾ? ಅದಕ್ಕೆ ಈಗಿ‌ನಿಂದಲೇ ಬೇಡಿಕೆ ಇಡುತ್ತಿದ್ದೇವೆ ಎಂದರು.

ಇದನ್ನೂ ಓದಿ : Dalit CM : ‌ ಮತ್ತೆ ದಲಿತ ಸಿಎಂ ಕೂಗು; ಮತ ನಮ್ದು, ಲೀಡರ್‌ ಯಾರ್ಯಾರೋ ಎಂದ ಮಹದೇವಪ್ಪ

Dalit CM : ಡಿ.ಕೆ. ಶಿವಕುಮಾರ್‌ ಕೇಸ್‌ ವಜಾಕ್ಕೂ ದಲಿತ ಸಿಎಂ ಬೇಡಿಕೆಗೂ ಸಂಬಂಧವಿಲ್ಲ

ಡಿ.ಕೆ ಶಿವಕುಮಾರ್‌ ಅವರ ವಿರುದ್ಧದ ಇ.ಡಿ. ಕೇಸ್ ವಜಾ ಆಗಿದ ತಕ್ಷಣ ನಾವು ದಲಿತ ಸಿಎಂ ಕೇಳುತಿದ್ದೇವೆ ಅನ್ನೋದು ತಪ್ಪು. ಈ ಹಿಂದೆ ಹಲವು ಬಾರಿ ಕೇಳಿದ್ದೇವೆ ಎಂದರು.

ಎಚ್.ಸಿ. ಮಹದೇವಪ್ಪ ಅವರ ಹೇಳಿಕೆ ಸಮರ್ಥಿಸಿದ ಸಚಿವ ಸತೀಶ್‌ ಜಾರಕಿಹೊಳಿ

ಬೆಳಗಾವಿ: ಮತ ಹಾಕುವವರು ನಾವು, ಸಿಎಂ ಅಧಿಕಾರ ಅನುಭವಿಸುವವರು ಅವರು? ದಲಿತರಿಗೆ ಸಿಎಂ ಸಿಗಬೇಕು- ಎಂಬ ಬೇಡಿಕೆ ಇಟ್ಟ ಸಮಾಜ ಕಲ್ಯಾಣ ಇಲಾಖೆ ಸಚಿವ ಎಚ್.ಸಿ ಮಹಾದೇವಪ್ಪ ಅವರಿಗೆ ಲೋಕೋಪಯೋಗಿ ಖಾತೆ ಸಚಿವ ಸತೀಶ್ ಜಾರಕಿಹೊಳಿ ಬೆಂಬಲ ಸೂಚಿಸಿದ್ದಾರೆ.

ಬೆಳಗಾವಿಯಲ್ಲಿ ಮಾತನಾಡಿದ ಅವರು, ʻʻದಲಿತ ಸಿಎಂ ಆಗಬೇಕೆಂಬ ಕೂಗು ಮೊದಲಿನಿಂದಲೂ ಇದೆ, ಹೊಸದೇನಿದೆ ಇದರಲ್ಲಿ? ಮಲ್ಲಿಕಾರ್ಜುನ ಖರ್ಗೆ ಅವರ ಕಾಲದಿಂದಲೂ ನಾವು (ದಲಿತರು) 99ಕ್ಕೆ ಔಟ್ ಆಗ್ತಿದ್ದೇವೆ. ಹಾಗೇ ಅವತ್ತಿನಿಂದಲೂ ದಲಿತರು ಸಿಎಂ ಸ್ಥಾನಕ್ಕೆ ಬೇಡಿಕೆ ಇಡುತ್ತಿದ್ದಾರೆʼʼ ಎಂದರು. ದಲಿತ ಸಿಎಂ ವಿಚಾರಕ್ಕೆ ಕೆಲವರ ಆಕ್ಷೇಪದ ಬಗ್ಗೆ ಪ್ರತಿಕ್ರಿಯಿಸಿದ ಅವರು, ʻʻರಾಜಕಾರಣ ಅಂದರೆ ಕುತಂತ್ರ ಇರೋದೇ ಎಂದರು.

ಡಿಕೆಶಿಗೆ ಸಂಬಂಧಿಸಿದ ಇಡಿ ವಿಚಾರಣೆಯನ್ನು ಸುಪ್ರೀಂ ಕೋರ್ಟ್ ರದ್ದು ಮಾಡುತ್ತಿದ್ದಂತೆಯೇ ದಲಿತ ಸಿಎಂ ಕೂಗು ಕೇಳಿ ಬಂತಾ? ಎಂಬ ಪ್ರಶ್ನೆಗೆ ಉತ್ತರಿಸಿದ ಅವರು, ಡಿಕೆಶಿ ಅವರಿಗೂ ದಲಿತ ಸಿಎಂ ಕೂಗಿಗೆ ಏನು ಸಂಬಂಧ? ಡಿಕೆಶಿಗೆ ಅವಕಾಶ ಇದ್ರೆ ಸಿಎಂ ಆಗೇ ಆಗ್ತಾರೆ. ಇದಕ್ಕೆ ಸಂಬಂಧ ಇಲ್ಲ ಸದ್ಯಕ್ಕೆ ಈ ವಿಚಾರ ಅವಶ್ಯಕತೆ ಇಲ್ಲ, ಇದು ಚುನಾವಣೆ ವಿಷಯವೂ ಅಲ್ಲ ಎಂದರು.

ʻʻವೋಟ್ ಹಾಕುವವರು ನಾವು, ನಮಗೂ ಅದರ ಲಾಭ ಸಿಗಬೇಕು. ನಾವು ಸಿಎಂ ಸ್ಥಾನ ಎಂಜಾಯ್ ಮಾಡಬೇಕಲ್ವಾ?ʼ ಎಂದು ಪರೋಕ್ಷವಾಗಿ ತಾನೂ ಸಿಎಂ ಆಕಾಂಕ್ಷಿ ಎಂದರು ಸತೀಶ್ ಜಾರಕಿಹೊಳಿ.

ʻʻನಮ್ಮ ವಿರುದ್ಧ ಪಿತೂರಿ ನಡೆಯುತ್ತಲೇ ಇರುತ್ತದೆ. ನಮ್ಮ ಬಗ್ಗೆ ಹಿಂದೆ ಮಾಹಿತಿ ಇಟ್ರೇ ಏನು ಆಗಲ್ಲ. ಒಳಗೂ ಹೊರಗೂ ನಾವು ಒಂದೇ ಹೇಳ್ತೀವಿʼʼ ಎಂದು ಸತೀಶ್ ಜಾರಕಿಹೊಳಿ ಹೇಳಿದರು.

ನಮ್ಮಲ್ಲಿ ಸೈನಿಕರೇ ಹೆಚ್ಚು, ಲೀಡರ್ಸ್‌ ಕೊರತೆ ಇದೆ ಎಂದ ಜಾರಕಿಹೊಳಿ

ʻʻನಮ್ಮಲ್ಲಿ ಸೈನಿಕರ ಸಂಖ್ಯೆ ಜಾಸ್ತಿಯಿದೆ, ಲೀಡರ್ಸ್ ಕೊರತೆ ಇದೆ ಅದು ಹುಟ್ಟಬೇಕು. ನಾಲ್ಕು ಕೋಟಿ ಅಹಿಂದ ವೋಟ್ ಬ್ಯಾಂಕ್ ಇದೆ ಅದೇ ನಮ್ಮ ಬೇಸ್ ಕೂಡ ಹೌದು. ಸಿಎಂ ವಿಚಾರದಲ್ಲಿ ಹೈಕಮಾಂಡ್ ಮಟ್ಟದಲ್ಲಿ ಪ್ರಭಾವ ಬೀರುವಲ್ಲಿ ನಾವು ವಿಫಲ ಆಗಿದ್ದೇವೆ. ನಮ್ಮ ಪಕ್ಷ ಅಷ್ಟೆ ಅಲ್ಲ ಎಲ್ಲ ಪಕ್ಷದಲ್ಲಿ ಹಾಗೇ ಇದೆ. ಹಿಂದೆ ಕಾರಜೋಳ ಅವರ ಹೆಸರಿತ್ತು ಆದರೆ ಆಗಲಿಲ್ಲ. ಜೆಡಿಎಸ್ ನಲ್ಲಿ ಕುಮಾರಸ್ವಾಮಿ ಅವರ ಹೆಸರಿತ್ತು. ಅವರೂ ಆಗಲಿಲ್ಲʼʼ ಎಂದು ನೆನಪಿಸಿದರು.

ಕ್ಷಣ ಕ್ಷಣದ ಮಾಹಿತಿಗಾಗಿ Vistara News FaceBook ಪೇಜ್ ಫಾಲೋ ಮಾಡಿ
ಮಹತ್ವದ ಮಾಹಿತಿಗಾಗಿ ವಿಸ್ತಾರ ನ್ಯೂಸ್ ಆ್ಯಪ್ ಉಚಿತವಾಗಿ ಡೌನ್ ಲೋಡ್ ಮಾಡಿಕೊಳ್ಳಿ: Andriod App | IOS App
Continue Reading
Click to comment

Leave a Reply

Your email address will not be published. Required fields are marked *

ಕರ್ನಾಟಕ

Nikhil Kumaraswamy: ಪ್ರಜ್ವಲ್‌ ಎಸ್‌ಐಟಿ ಮುಂದೆ ಹಾಜರಾಗಿ ತನಿಖೆ ಎದುರಿಸುವುದೇ ಸೂಕ್ತ: ನಿಖಿಲ್‌ ಕುಮಾರಸ್ವಾಮಿ

Nikhil Kumaraswamy: ಸಂತ್ರಸ್ತೆ ಹೆಣ್ಣು ಮಕ್ಕಳ ಮುಖವನ್ನು ಬ್ಲರ್ ಮಾಡಿಯೂ ತೋರಿಸಿಲ್ಲ. ರಾಜಕಾರಣಕ್ಕಾಗಿ ಈ ರೀತಿ ಮಾಡುವುದು ಎಷ್ಟು ಸರಿ? ಇಡೀ ರಾಜ್ಯದ ಜನಕ್ಕೆ ಈ ರೀತಿಯ ತೋರಿಸಿದ್ದು ಯಾರು? ಅವರ ಬಗ್ಗೆ ಯಾಕೆ ತನಿಖೆ ಆಗುತ್ತಿಲ್ಲ? ಇದರಲ್ಲಿ ಯಾರ ಪಾತ್ರ ಇದೆಯೋ , ರಾಜ್ಯ ಸರ್ಕಾರದ ಜವಾಬ್ದಾರಿ ಇದೆ. ಇದು ಇವತ್ತು ರಾಷ್ಟ್ರದ ಮಟ್ಟದಲ್ಲಿ ಸುದ್ದಿ ಆಗಿದೆ. ಇದಕ್ಕೆ ಉತ್ತರ ಸಿಗಬೇಕು. ತನಿಖೆ ಪಾರದರ್ಶಕವಾಗಿ ಆಗಬೇಕು ಅಲ್ವಾ‌? ಎಂದು ನಿಖಿಲ್‌ ಕುಮಾರಸ್ವಾಮಿ ಪ್ರಶ್ನೆ ಮಾಡಿದ್ದಾರೆ.

VISTARANEWS.COM


on

Prajwal should appear before SIT and face probe says Nikhil Kumaraswamy
Koo

ಬೆಂಗಳೂರು: ಅಶ್ಲೀಲ ವಿಡಿಯೊ (Absence video) ಪ್ರಕರಣಕ್ಕೆ ಸಂಬಂಧಿಸಿದಂತೆ ಸಂಸದ ಪ್ರಜ್ವಲ್‌ ರೇವಣ್ಣ (Prajwal Revanna Case) ಅವರು ಎಸ್ಐಟಿ ಮುಂದೆ ಹಾಜರಾಗಿ ತನಿಖೆ ಎದುರಿಸಬೇಕು ಎಂದು ಜೆಡಿಎಸ್‌ ಯುವ ಘಟಕದ ರಾಜ್ಯಾಧ್ಯಕ್ಷ ನಿಖಿಲ್‌ ಕುಮಾರಸ್ವಾಮಿ (Nikhil Kumaraswamy) ಅಭಿಪ್ರಾಯಪಟ್ಟಿದ್ದಾರೆ.

ಈ ಸಂಬಂಧ ಮಾಧ್ಯಮದವರೊಂದಿಗೆ ಮಾತನಾಡಿದ ನಿಖಿಲ್‌ ಕುಮಾರಸ್ವಾಮಿ, ಸಂತ್ರಸ್ತೆ ಹೆಣ್ಣು ಮಕ್ಕಳ ಮುಖವನ್ನು ಬ್ಲರ್ ಮಾಡಿಯೂ ತೋರಿಸಿಲ್ಲ. ರಾಜಕಾರಣಕ್ಕಾಗಿ ಈ ರೀತಿ ಮಾಡುವುದು ಎಷ್ಟು ಸರಿ? ಇಡೀ ರಾಜ್ಯದ ಜನಕ್ಕೆ ಈ ರೀತಿಯ ತೋರಿಸಿದ್ದು ಯಾರು? ಅವರ ಬಗ್ಗೆ ಯಾಕೆ ತನಿಖೆ ಆಗುತ್ತಿಲ್ಲ? ಇದರಲ್ಲಿ ಯಾರ ಪಾತ್ರ ಇದೆಯೋ , ರಾಜ್ಯ ಸರ್ಕಾರದ ಜವಾಬ್ದಾರಿ ಇದೆ. ಇದು ಇವತ್ತು ರಾಷ್ಟ್ರದ ಮಟ್ಟದಲ್ಲಿ ಸುದ್ದಿ ಆಗಿದೆ. ಇದಕ್ಕೆ ಉತ್ತರ ಸಿಗಬೇಕು. ತನಿಖೆ ಪಾರದರ್ಶಕವಾಗಿ ಆಗಬೇಕು ಅಲ್ವಾ‌? ಎಂದು ನಿಖಿಲ್‌ ಕುಮಾರಸ್ವಾಮಿ ಪ್ರಶ್ನೆ ಮಾಡಿದರು.

ಪ್ರಜ್ವಲ್ ಪೆನ್ ಡ್ರೈವ್ ಪ್ರಕರಣ ಹಿನ್ನೆಲೆಯಲ್ಲಿ ತಲೆ ಮರೆಸಿಕೊಂಡಿರುವ ಹಾಸನ ಸಂಸದ ಪ್ರಜ್ವಲ್‌ ರೇವಣ್ಣ ಎಸ್ಐಟಿ ತನಿಖೆ ಎದುರಿಸುವುದು ಸೂಕ್ತ. ಘಟ‌ನೆ ಆದ ದಿನವೇ ಎಚ್.ಡಿ. ಕುಮಾರಸ್ವಾಮಿ ಅವರು ಹೇಳಿದ್ದಾರೆ. ಉಪ್ಪು ತಿಂದವರು ನೀರು ಕುಡಿಯಬೇಕು ಅಂತ. ಎಸ್‌ಐಟಿ ತನಿಖೆ ಮಾಡುತ್ತಲಿದೆ. ಹೀಗಾಗಿ ಸಂಸದರು ಎಸ್ಐಟಿ ಮುಂದೆ ಹಾಜರಾಗಿ ತನಿಖೆ ಎದುರಿಸಬೇಕು. ಇದು ನನ್ನ ವೈಯಕ್ತಿಕ ಅಭಿಪ್ರಾಯವಾಗಿದೆ. ಪ್ರಜ್ವಲ್‌ ನನ್ನ ಜತೆಯಂತೂ ಸಂಪರ್ಕದಲ್ಲಿಲ್ಲ ಎಂದು ನಿಖಿಲ್‌ ಹೇಳಿದರು.

ದೇವೇಗೌಡ ಆತ್ಮಹತ್ಯೆ ಹೇಳಿಕೆ; ಶಿವರಾಮೇಗೌಡ ವಿರುದ್ಧ ನಿಖಿಲ್‌ ಕುಮಾರಸ್ವಾಮಿ ಕೆಂಡ

ಸಂಸದ ಪ್ರಜ್ವಲ್‌ ರೇವಣ್ಣ (Prajwal Revanna Case) ಎಸಗಿದ್ದಾರೆ ಎನ್ನಲಾದ ಲೈಂಗಿಕ ದೌರ್ಜನ್ಯ ಪ್ರಕರಣಕ್ಕೆ ಸಂಬಂಧಿಸಿದಂತೆ ವಕೀಲ ದೇವರಾಜೇಗೌಡ (Devaraje Gowda) ಹಾಗೂ ಮಾಜಿ ಸಂಸದ ಎಲ್‌.ಆರ್. ಶಿವರಾಮೇಗೌಡ (LR Shivarame Gowda) ಅವರ ಮಧ್ಯೆ ನಡೆದಿದೆ ಎನ್ನಲಾದ ದೂರವಾಣಿ ಸಂಭಾಷಣೆಯ ಆಡಿಯೊ ಈಗ ಎಲ್ಲಡೆ ವೈರಲ್‌ ಆಗಿದೆ. ಅಲ್ಲಿ ಮಾಜಿ ಪ್ರಧಾನಿ, ಜೆಡಿಎಸ್‌ ವರಿಷ್ಠ ಎಚ್.ಡಿ. ದೇವೇಗೌಡ (HD Dewegowda) ಅವರ ಬಗ್ಗೆ ಲಘುವಾಗಿ ಮಾತನಾಡಿದ್ದ ಹೇಳಿಕೆಗೆ ವ್ಯಾಪಕ ಟೀಕೆಗಳು ಕೇಳಿ ಬರುತ್ತಿವೆ. ಇದನ್ನು ಜೆಡಿಎಸ್‌ ಯುವ ಘಟಕದ ರಾಜ್ಯಾಧ್ಯಕ್ಷ ನಿಖಿಲ್‌ ಕುಮಾರಸ್ವಾಮಿ (Nikhil Kumaraswamy) ಖಂಡಿಸಿದ್ದಾರೆ.

ಮಾಧ್ಯಮದವರೊಂದಿಗೆ ಮಾತನಾಡಿದ ನಿಖಿಲ್‌ ಕುಮಾರಸ್ವಾಮಿ, ನಿನ್ನೆ ಮಾಜಿ ಸಂಸದ ಎಲ್.ಆರ್. ಶಿವರಾಮೇಗೌಡ ಅವರ ಆಡಿಯೊವನ್ನು ನಾನು ಕೇಳಿದೆ. ದೇವೇಗೌಡರ ಬಗ್ಗೆ ಈ ರೀತಿ ಲಘುವಾಗಿ ಮಾತನಾಡಬಾರದು. ರಾಜಕಾರಣ ಬೇರೆಯೊಬ್ಬರ ಸಾವು ಬಯಸುವುದು ಅವರ ಸಂಸ್ಕೃತಿಯನ್ನು ತೋರುತ್ತದೆ ಎಂದು ಅಸಮಾಧಾನ ವ್ಯಕ್ತಪಡಿಸಿದರು.

ಸಾವಿನ ಹೆಸರಲ್ಲಿ ರಾಜಕೀಯ ಮಾಡೋದು ಸರಿಯಲ್ಲ

ಇಡೀ ರಾಜ್ಯದ ಜನ ಶಿವರಾಮೇಗೌಡರ ಆಡಿಯೊವನ್ನು ಕೇಳಿದ್ದಾರೆ. ದೇಶದ ಮಾಜಿ ಪ್ರಧಾನಿಗಳು, ಕೆಂಪುಕೋಟೆ ಮೇಲೆ ಬಾವುಟ ಹಾರಿಸಿದ ಕನ್ನಡದ ಹೆಮ್ಮೆಯ ಮಾಜಿ ಪ್ರಧಾನಿಗಳ ವಿರುದ್ಧ ಇಂಥ ಹೇಳಿಕೆಯನ್ನು ಕೊಡಬಾರದಿತ್ತು. ಅವರ ಸಂಸ್ಕೃತಿ, ಮನಸ್ಥಿತಿ ಹೇಗಿದೆ ಅ‌ನ್ನೋದನ್ನು ಅರ್ಥ ಮಾಡಿಕೊಳ್ಳಬೇಕು. ರಾಜಕೀಯವನ್ನು ಮಾಡಿ ಯಾರು ಬೇಡ ಎಂದು ಹೇಳುತ್ತಾರೆ? ಆದರೆ, ಇನ್ನೊಬ್ಬರ ಸಾವಿನ ಹೆಸರಲ್ಲಿ ರಾಜಕೀಯ ಮಾಡೋದು ಸರಿಯಲ್ಲ ಎಂದು ನಿಖಿಲ್‌ ಕುಮಾರಸ್ವಾಮಿ ಹೇಳಿದರು.

ನಮ್ಮ ಬಳಿ ಅಡ್ಜೆಸ್ಟ್‌ಮೆಂಟ್‌ ಸಂಸ್ಕೃತಿ ಇಲ್ಲ

ಮಾಜಿ ಸಿಎಂ ಎಚ್.ಡಿ. ಕುಮಾರಸ್ವಾಮಿ ಅವರು ತಮ್ಮ ಮಗನ ಭವಿಷ್ಯದ ಬಗ್ಗೆ ಯೋಚನೆ ಮಾಡಿ ಹೀಗೆ ಮಾಡಿದ್ದಾರೆ ಎಂದು ಶಿವರಾಮೇಗೌಡ ಅವರು ಹೇಳಿರುವ ಮಾತುಗಳು ಆಡಿಯೊದಲ್ಲಿ ದಾಖಲಾಗಿರುವ ಬಗ್ಗೆ ಪ್ರತಿಕ್ರಿಯೆ ನೀಡಿದ ನಿಖಿಲ್‌ ಕುಮಾರಸ್ವಾಮಿ, ಚುನಾವಣೆಗಳಲ್ಲಿ ಅಡ್ಜಸ್ಟ್‌ಮೆಂಟ್‌ ಕೆಲವು ಸಲ ಆಗುತ್ತದೆ. ಅದು ಹೊರಗೂ ಬರುತ್ತದೆ. ಆದರೆ, ನನ್ನ ಬಗ್ಗೆ ನಮ್ಮ ತಂದೆ ಎಂದೂ ಹೀಗೆ ಯೋಚನೆ ಮಾಡಿಲ್ಲ. ನಮ್ಮ ತಂದೆ ರಾಜ್ಯದ, ಜನರ ಬಗ್ಗೆ ಯೋಚನೆ ಮಾಡ್ತಾರೆ. ಬಹಳ ಜನ ಅಡ್ಜೆಸ್ಟ್‌ಮೆಂಟ್‌ ಮಾಡಿಕೊಂಡು ಇವತ್ತು ಬಹಳ ಒಳ್ಳೇ ಸ್ಥಾನದಲ್ಲಿ ಇದ್ದಾರೆ. ಆದರೆ, ನಮ್ಮ ಬಳಿ ಆ ರೀತಿ ಯಾವ ಅಡ್ಜೆಸ್ಟ್‌ಮೆಂಟ್‌ ಸಂಸ್ಕೃತಿ ಇಲ್ಲ ಎಂದು ಹೇಳಿದರು.

ಶಿವರಾಮೇಗೌಡ ಮಾತನಾಡಿರುವ ಪ್ರತಿ ವಿಚಾರದಲ್ಲಿಯೂ ರಾಜ್ಯ ಸರ್ಕಾರದ ಕೈವಾಡ ಇದೆ ಎಂಬುದು ಗೊತ್ತಾಗುತ್ತದೆ. ಅವರೂ ಕೂಡಾ ಸರ್ಕಾರದ ಪ್ರಮುಖ ವ್ಯಕ್ತಿಯೊಬ್ಬರ ಹೆಸರು ಹೇಳಿದ್ದಾರೆ ಎಂದು ಡಿಸಿಎಂ ಡಿ.ಕೆ. ಶಿವಕುಮಾರ್‌ ವಿರುದ್ಧ ಪರೋಕ್ಷವಾಗಿ ಆರೋಪ ಮಾಡಿದರು.

ಎಚ್.ಡಿ. ಕುಮಾರಸ್ವಾಮಿ ಅವರಿಗೆ ಮಗನ ಭವಿಷ್ಯದ ಚಿಂತೆ ಅಂತಾರೆ. ಎರಡು ಚುನಾವಣೆಯನ್ನು ನಾನು ಎದುರಿಸಿದ್ದೇನೆ. ಕೆಲವೊಮ್ಮೆ ಕೆಲವು ಸಂದರ್ಭದಲ್ಲಿ ಅಡ್ಜೆಸ್ಟ್‌ಮೆಂಟ್‌ ಒಳಗೆ ಹೊರಗೆ ಆಗುತ್ತದೆ. ಆದರೆ, ನಮ್ಮ ವಿಚಾರದಲ್ಲಿ ಹೀಗೆ ಆಗಲಿಲ್ಲ. ನನ್ನ ವಿಷಯದಲ್ಲಿ ದೊಡ್ಡ ಮಟ್ಟದಲ್ಲಿ ಕೂರಿಸಬೇಕು ಅನ್ನೋ ಚಿಂತನೆ ಕುಮಾರಣ್ಣರಿಗೆ ಇಲ್ಲ. ಅವರಿಗೆ ರಾಜ್ಯದ ಜನತೆ ಬಗ್ಗೆ ಇದ್ದ ಕಮಿಟ್ಮೆಂಟ್, ಬದ್ಧತೆ ಹಿನ್ನೆಲೆಯಲ್ಲಿ ಅವರು ಯಾವುದೇ ರೀತಿಯ ಯೋಚನೆಯನ್ನು ಮಾಡಲಿಲ್ಲ. ನಾನು ಸೋತ ಬಳಿಕವೂ ರಾಮನಗರ, ಮಂಡ್ಯದಲ್ಲಿ ಓಡಾಡುತ್ತಿದ್ದೇನೆ. ಅನೇಕ ರಾಜಕಾರಣಿ ಮಕ್ಕಳು ಅಡ್ಜೆಸ್ಟ್‌ಮೆಂಟ್‌ ಮೂಲಕ ಉತ್ತಮ ಸ್ಥಾನಗಳಲ್ಲಿದ್ದಾರೆ. ನನಗೆ ಹಾಗೇ ಆಗಿಲ್ಲ. ನಾನು ಒಬ್ಬನೇ ಓಡಾಡುತ್ತಿದ್ದೇನೆ ಎಂದು ನಿಖಿಲ್‌ ಕುಮಾರಸ್ವಾಮಿ ಹೇಳಿದರು.

ಇದನ್ನೂ ಓದಿ: CM Siddaramaiah: ಸರ್ಕಾರಕ್ಕೆ ಒಂದು ವರ್ಷ; ಹಲವು ಕನಸು ಬಿಚ್ಚಿಟ್ಟ ಸಿಎಂ ಸಿದ್ದರಾಮಯ್ಯ! ಮಾಧ್ಯಮ ಸಂವಾದದ ಲೈವ್‌ ಇಲ್ಲಿದೆ

ನೂರು ಕೋಟಿ ರೂಪಾಯಿ ಆಫರ್ ವಿಚಾರವೂ ತನಿಖೆ ಆಗಬೇಕು

ಶಿವರಾಮೇಗೌಡ ಒಬ್ಬ ಸರ್ಕಾರದ ವ್ಯಕ್ತಿಯ ಹೆಸರನ್ನು ಉಲ್ಲೇಖಿಸುತ್ತಾರೆ. ಹಾಸನದ ಸಂಸದರ ವಿಡಿಯೊ ರಿಲೀಸ್ ಆದ ಬಳಿಕ ಸಂತ್ರಸ್ತೆ ಮುಖವನ್ನು ಬ್ಲರ್ ಮಾಡಲಿಲ್ಲ. ಸಂಸದರ ಮೇಲೆ ಆರೋಪ ಕೇಳಿಬಂದಿದೆ. ಆರೋಪಿ ಅದನ್ನು ಎದುರಿಸಲಿ. ಆದರೆ, ಸಂತ್ರಸ್ತೆಯರ ವಿಡಿಯೊ ಬಿಡುಗಡೆ ಮಾಡಿ ಮಾನ ಹರಾಜು ಮಾಡೋದು ಯಾಕೆ? ವಿಡಿಯೊ ರಿಲೀಸ್ ಮಾಡಿದವರ ಬಗ್ಗೆ ಕ್ರಮ ಯಾಕೆ ಆಗುತ್ತಿಲ್ಲ. ನೂರು ಕೋಟಿ ರೂಪಾಯಿ ಆಫರ್ ವಿಚಾರವೂ ತನಿಖೆ ಆಗಬೇಕು ಎಂದು ನಿಖಿಲ್‌ ಕುಮಾರಸ್ವಾಮಿ ಆಗ್ರಹಿಸಿದರು.

Continue Reading

ದೇಶ

Lok Sabha Election 2024: ರ್‍ಯಾಲಿಯಲ್ಲಿ ಕಾಲ್ತುಳಿತದ ಸ್ಥಿತಿ ನಿರ್ಮಾಣ; ಭಾಷಣ ಮಾಡದೇ ವೇದಿಕೆಯಿಂದ ತೆರಳಿದ ರಾಹುಲ್‌, ಅಖಿಲೇಶ್‌

Lok Sabha Election 2024: ಪಡಿಲ ಮಹಾದೇವ್‌ನಲ್ಲಿ ನಡೆದ ಇಂಡಿಯಾ ಒಕ್ಕೂಟದ ರ್‍ಯಾಲಿಯಲ್ಲಿ ಕಾಂಗ್ರೆಸ್‌ ಮತ್ತು ಸಮಾಜವಾದಿ ಪಕ್ಷಗಳ ಭಾರಿ ಬೆಂಬಲಿಗರು ಸೇರಿದ್ದರು, ಜನ ವೇದಿಕೆ ಮೇಲೆ ಬರಲಿ ಬ್ಯಾರಿಕೇಡ್‌ಗಳನ್ನು ಮುರಿದ ಕಾರಣ, ಗೊಂದಲದ ವಾತಾವರಣ ಉಂಟಾಗಿತ್ತು, ಸಮಾಧಾನದಿಂದ ಇರುವಂತೆ ರಾಹುಲ್ ಗಾಂಧಿ ಮನವಿ ಮಾಡಿದರೂ ಪ್ರಯೋಜನವಾಗಲಿಲ್ಲ. ಒಟ್ಟಿನಲ್ಲಿ ಒಂದು ಕ್ಷಣಕ್ಕೆ ಕಾಲ್ತುಳಿತದಂತಹ ದುರ್ಘಟನೆ ಸಂಭವಿಸುವ ಎಲ್ಲಾ ಲಕ್ಷಣ ಎದ್ದು ಕಾಣುತ್ತಿತ್ತು.

VISTARANEWS.COM


on

Lok Sabha Election 2024
Koo

ಉತ್ತರಪ್ರದೇಶ: ಲೋಕಸಭೆ ಚುನಾವಣೆ(Lok Sabha Election 2024) ರಂಗು ದಿನೇ ದಿನೇ ಹೆಚ್ಚಾಗುತ್ತಿದೆ. ಚುನಾವಣೆ ಕೊನೆಯ ಹಂತಕ್ಕೆ ಬರುತ್ತಿದ್ದಂತೆ ರಾಜಕೀಯ ನಾಯಕರು ಒಂದರ ಮೇಲೊಂದರಂತೆ ರ್ಯಾಲಿ, ಸಾರ್ವಜನಿಕ ಸಭೆ ನಡೆಸುವ ಮೂಲಕ ತಮ್ಮ ಶಕ್ತಿಪ್ರದರ್ಶನಕ್ಕೆ ಮುಂದಾಗಿದ್ದಾರೆ. ನಿನ್ನೆ ಉತ್ತರಪ್ರದೇಶ(Uttara Pradesh)ದಲ್ಲಿ ಕಾಂಗ್ರೆಸ್‌ ಮುಖಂಡ ರಾಹುಲ್‌ ಗಾಂಧಿ(Rahul Gandhi) ಮತ್ತು ಅಖಿಲೇಶ್‌ ಯಾದವ್‌(Akhilesh Yadav) ಭಾಗಿಯಾಗಿದ್ದ ಚುನಾವಣಾ ರ್ಯಲಿಯಲ್ಲಿ ದಾಖಲೆ ಪ್ರಮಾಣದಲ್ಲಿ ಜನಸ್ತೋಮ ಸೇರಿದ್ದು, ಬಿಗುವಿನ ವಾತಾವರಣ ಸೃಷ್ಟಿಯಾಗಿತ್ತು. ಫುಲ್‌ಫುರದಲ್ಲಿ ಸ್ವತಃ ನಾಯಕರೇ ಆಘಾತಕ್ಕೀಡಾಗುವಂತಹ ರೀತಿಯಲ್ಲಿ ಜನ ಭಾಗಿಯಾಗಿದ್ದರು. ನೆರೆದಿರುವ ಜನರನ್ನು ನಿಯಂತ್ರಿಸಲು ಪೊಲೀಸರು, ಭದ್ರತಾ ಸಿಬ್ಬಂದಿ ಹರಸಾಹಸ ಪಡಬೇಕಾಯಿತು.

ಪಡಿಲ ಮಹಾದೇವ್‌ನಲ್ಲಿ ನಡೆದ ಇಂಡಿಯಾ ಒಕ್ಕೂಟದ ರ್‍ಯಾಲಿಯಲ್ಲಿ ಕಾಂಗ್ರೆಸ್‌ ಮತ್ತು ಸಮಾಜವಾದಿ ಪಕ್ಷಗಳ ಭಾರಿ ಬೆಂಬಲಿಗರು ಸೇರಿದ್ದರು, ಜನ ವೇದಿಕೆ ಮೇಲೆ ಬರಲಿ ಬ್ಯಾರಿಕೇಡ್‌ಗಳನ್ನು ಮುರಿದ ಕಾರಣ, ಗೊಂದಲದ ವಾತಾವರಣ ಉಂಟಾಗಿತ್ತು, ಸಮಾಧಾನದಿಂದ ಇರುವಂತೆ ರಾಹುಲ್ ಗಾಂಧಿ ಮನವಿ ಮಾಡಿದರೂ ಪ್ರಯೋಜನವಾಗಲಿಲ್ಲ. ಒಟ್ಟಿನಲ್ಲಿ ಒಂದು ಕ್ಷಣಕ್ಕೆ ಕಾಲ್ತುಳಿತದಂತಹ ದುರ್ಘಟನೆ ಸಂಭವಿಸುವ ಎಲ್ಲಾ ಲಕ್ಷಣ ಎದ್ದು ಕಾಣುತ್ತಿತ್ತು.

ಭಾಷಣ ಮಾಡದೇ ವೇದಿಕೆಯಿಂದ ನಿರ್ಗಮಿಸಿದ ರಾಹುಲ್‌, ಅಖಿಲೇಶ್‌

ಭಾರೀ ಜನಸ್ತೋಮ ಕಂಡು ದಂಗಾಗಿದ್ದ ರಾಹುಲ್‌ ಮತ್ತು ಅಖಿಲೇಶ್‌ ವೇದಿಕೆಯಿಂದ ನಿರ್ಗಮಿಸುವುದೇ ಸೂಕ್ತ ಎಂದು ಭಾವಿಸಿದರು. ಉದ್ರಿಕ್ತ ಜನ ಬ್ಯಾರಿಕೇಟ್‌ಗಳನ್ನು ಮುರಿದು ಒಳಗೆ ಪ್ರವೇಶಿಸಿದ್ದರು. ಅಲ್ಲದೇ ಕಹಲವು ವೇದಿಕೆಗೆ ಹತ್ತಲೂ ಯತ್ನಿಸಿದ್ದರು. ಕೆಲವರು ವೇದಿಕೆ ಏರುವಲ್ಲಿ ಯಶಸ್ವಿ ಆಗಿದ್ದರು. ಕಾರ್ಯಕರ್ತರ ಈ ರೀತಿಯಾದ ಅನುಚಿತ ವರ್ತನೆಯಿಂದ ಕುಪಿತಗೊಂಡ ಇಬ್ಬರೂ ನಾಯಕರು ಏನೂ ಮಾತನಾಡಲಿಲ್ಲ. ತಾವು ಮಾಡಬೇಕಾಗಿದ್ದ ಭಾಷಣವನ್ನೂ ಮಾಡದೇ ಇಬ್ಬರೂ ನಾಯಕರು ವೇದಿಕೆಯಿಂದ ನಿರ್ಗಮಿಸಿ ಬಳಿಕ ಇಬ್ಬರೂ ನಾಯಕರು ಇಲ್ಲಿಂದ ಹೆಲಿಕಾಪ್ಟರ್‌ನಲ್ಲಿ ತೆರಳಿದರು.

ಗಲಾಟೆ ಎಷ್ಟು ದೊಡ್ಡದಾಗಿದೆ ಎಂದರೆ ರಾಹುಲ್ ಗಾಂಧಿ ಮತ್ತು ಅಖಿಲೇಶ್ ಯಾದವ್ ಯಾವುದೇ ಭಾಷಣ ಮಾಡದೆ ಸ್ಥಳದಿಂದ ನಿರ್ಗಮಿಸಿದರು. ಫುಲ್ಪುರ್ ಲೋಕಸಭಾ ಕ್ಷೇತ್ರದಲ್ಲಿ ರಾಹುಲ್ ಮತ್ತು ಅಖಿಲೇಶ್ ಜಂಟಿ ಸಾರ್ವಜನಿಕ ಸಭೆ ನಡೆಯಬೇಕಿತ್ತು. ರಾಹುಲ್ ಗಾಂಧಿ ಅವರು ಪ್ರಯಾಗ್‌ರಾಜ್‌ನ ಪಕ್ಷದ ಅಭ್ಯರ್ಥಿ ಉಜ್ವಲ್ ರಾಮನ್‌ಸಿಂಗ್‌ಗೆ ಮತ ನೀಡುವಂತೆ ಮತದಾರರಿಗೆ ಮನವಿ ಮಾಡಿದರು.

ಇದನ್ನೂ ಓದಿ:Janhvi Kapoor: 12ನೇ ವಯಸ್ಸಿನಲ್ಲಿಯೇ ಅಶ್ಲೀಲ ವೆಬ್‌ಸೈಟ್‌ನಲ್ಲಿ ನನ್ನ ಫೋಟೊ ಅಪ್‌ಲೋಡ್‌ ಆಗಿತ್ತು ಎಂದ ಶ್ರೀದೇವಿ ಮಗಳು!

ಕಾಂಗ್ರೆಸ್-ಸಮಾಜವಾದಿ ಪಕ್ಷದ ಸಹಭಾಗಿತ್ವವನ್ನು ಬೆಂಬಲಿಸಲು ನಮ್ಮ ಸಾವಿರಾರು ಕಾರ್ಯಕರ್ತರು ಇಲ್ಲಿದ್ದಾರೆ. ಮತಗಟ್ಟೆಗಳಲ್ಲಿ ಬಿಜೆಪಿ-ಆರ್‌ಎಸ್‌ಎಸ್ ಕಾರ್ಯಕರ್ತರ ವಿರುದ್ಧ ನಿಂತು ಇಲ್ಲಿನ ಅಭ್ಯರ್ಥಿಯನ್ನು 5 ಲಕ್ಷ ಮತಗಳಿಂದ ಗೆಲ್ಲಿಸುವಂತೆ ನಾನು ನಿಮಗೆ ಮನವಿ ಮಾಡುತ್ತೇನೆ, ಇಲ್ಲಿ ನಮ್ಮ ಅಭ್ಯರ್ಥಿ ಉಜ್ವಲ್ ರಮಣ್‌ಸಿಂಗ್ ಇದ್ದಾರೆ, ಅವರನ್ನು ಭಾರಿ ಬಹುಮತದಿಂದ ಗೆಲ್ಲಿಸಿ ಎಂದಷ್ಟೇ ಹೇಳಿ ವೇದಿಕೆಯಿಂದ ನಿರ್ಗಮಿಸಿದರು.

Continue Reading

ರಾಜಕೀಯ

Prajwal Revanna Case: ಶಿವರಾಮೇಗೌಡರ ದೇವೇಗೌಡ ಆತ್ಮಹತ್ಯೆ ಹೇಳಿಕೆ; ನಿಖಿಲ್‌ ಕುಮಾರಸ್ವಾಮಿ ಕೆಂಡ

Prajwal Revanna Case: ಇಡೀ ರಾಜ್ಯದ ಜನ ಶಿವರಾಮೇಗೌಡರ ಆಡಿಯೊವನ್ನು ಕೇಳಿದ್ದಾರೆ. ದೇಶದ ಮಾಜಿ ಪ್ರಧಾನಿಗಳು, ಕೆಂಪುಕೋಟೆ ಮೇಲೆ ಬಾವುಟ ಹಾರಿಸಿದ ಕನ್ನಡದ ಹೆಮ್ಮೆಯ ಮಾಜಿ ಪ್ರಧಾನಿಗಳ ವಿರುದ್ಧ ಇಂಥ ಹೇಳಿಕೆಯನ್ನು ಕೊಡಬಾರದಿತ್ತು. ಅವರ ಸಂಸ್ಕೃತಿ, ಮನಸ್ಥಿತಿ ಹೇಗಿದೆ ಅ‌ನ್ನೋದನ್ನು ಅರ್ಥ ಮಾಡಿಕೊಳ್ಳಬೇಕು. ರಾಜಕೀಯವನ್ನು ಮಾಡಿ ಯಾರು ಬೇಡ ಎಂದು ಹೇಳುತ್ತಾರೆ? ಆದರೆ, ಇನ್ನೊಬ್ಬರ ಸಾವಿನ ಹೆಸರಲ್ಲಿ ರಾಜಕೀಯ ಮಾಡೋದು ಸರಿಯಲ್ಲದ ಎಂದು ನಿಖಿಲ್‌ ಕುಮಾರಸ್ವಾಮಿ ಹೇಳಿದ್ದಾರೆ.

VISTARANEWS.COM


on

Prajwal Revanna Case Shivarame Gowdas Deve Gowda suicide statement says Nikhil Kumaraswamy
Koo

ಬೆಂಗಳೂರು: ಸಂಸದ ಪ್ರಜ್ವಲ್‌ ರೇವಣ್ಣ (Prajwal Revanna Case) ಎಸಗಿದ್ದಾರೆ ಎನ್ನಲಾದ ಲೈಂಗಿಕ ದೌರ್ಜನ್ಯ ಪ್ರಕರಣಕ್ಕೆ ಸಂಬಂಧಿಸಿದಂತೆ ವಕೀಲ ದೇವರಾಜೇಗೌಡ (Devaraje Gowda) ಹಾಗೂ ಮಾಜಿ ಸಂಸದ ಎಲ್‌.ಆರ್. ಶಿವರಾಮೇಗೌಡ (LR Shivarame Gowda) ಅವರ ಮಧ್ಯೆ ನಡೆದಿದೆ ಎನ್ನಲಾದ ದೂರವಾಣಿ ಸಂಭಾಷಣೆಯ ಆಡಿಯೊ ಈಗ ಎಲ್ಲಡೆ ವೈರಲ್‌ ಆಗಿದೆ. ಅಲ್ಲಿ ಮಾಜಿ ಪ್ರಧಾನಿ, ಜೆಡಿಎಸ್‌ ವರಿಷ್ಠ ಎಚ್.ಡಿ. ದೇವೇಗೌಡ (HD Dewegowda) ಅವರ ಬಗ್ಗೆ ಲಘುವಾಗಿ ಮಾತನಾಡಿದ್ದ ಹೇಳಿಕೆಗೆ ವ್ಯಾಪಕ ಟೀಕೆಗಳು ಕೇಳಿ ಬರುತ್ತಿವೆ. ಇದನ್ನು ಜೆಡಿಎಸ್‌ ಯುವ ಘಟಕದ ರಾಜ್ಯಾಧ್ಯಕ್ಷ ನಿಖಿಲ್‌ ಕುಮಾರಸ್ವಾಮಿ (Nikhil Kumaraswamy) ಖಂಡಿಸಿದ್ದಾರೆ.

ಮಾಧ್ಯಮದವರೊಂದಿಗೆ ಮಾತನಾಡಿದ ನಿಖಿಲ್‌ ಕುಮಾರಸ್ವಾಮಿ, ನಿನ್ನೆ ಮಾಜಿ ಸಂಸದ ಎಲ್.ಆರ್. ಶಿವರಾಮೇಗೌಡ ಅವರ ಆಡಿಯೊವನ್ನು ನಾನು ಕೇಳಿದೆ. ದೇವೇಗೌಡರ ಬಗ್ಗೆ ಈ ರೀತಿ ಲಘುವಾಗಿ ಮಾತನಾಡಬಾರದು. ರಾಜಕಾರಣ ಬೇರೆಯೊಬ್ಬರ ಸಾವು ಬಯಸುವುದು ಅವರ ಸಂಸ್ಕೃತಿಯನ್ನು ತೋರುತ್ತದೆ ಎಂದು ಅಸಮಾಧಾನ ವ್ಯಕ್ತಪಡಿಸಿದರು.

ಸಾವಿನ ಹೆಸರಲ್ಲಿ ರಾಜಕೀಯ ಮಾಡೋದು ಸರಿಯಲ್ಲ

ಇಡೀ ರಾಜ್ಯದ ಜನ ಶಿವರಾಮೇಗೌಡರ ಆಡಿಯೊವನ್ನು ಕೇಳಿದ್ದಾರೆ. ದೇಶದ ಮಾಜಿ ಪ್ರಧಾನಿಗಳು, ಕೆಂಪುಕೋಟೆ ಮೇಲೆ ಬಾವುಟ ಹಾರಿಸಿದ ಕನ್ನಡದ ಹೆಮ್ಮೆಯ ಮಾಜಿ ಪ್ರಧಾನಿಗಳ ವಿರುದ್ಧ ಇಂಥ ಹೇಳಿಕೆಯನ್ನು ಕೊಡಬಾರದಿತ್ತು. ಅವರ ಸಂಸ್ಕೃತಿ, ಮನಸ್ಥಿತಿ ಹೇಗಿದೆ ಅ‌ನ್ನೋದನ್ನು ಅರ್ಥ ಮಾಡಿಕೊಳ್ಳಬೇಕು. ರಾಜಕೀಯವನ್ನು ಮಾಡಿ ಯಾರು ಬೇಡ ಎಂದು ಹೇಳುತ್ತಾರೆ? ಆದರೆ, ಇನ್ನೊಬ್ಬರ ಸಾವಿನ ಹೆಸರಲ್ಲಿ ರಾಜಕೀಯ ಮಾಡೋದು ಸರಿಯಲ್ಲ ಎಂದು ನಿಖಿಲ್‌ ಕುಮಾರಸ್ವಾಮಿ ಹೇಳಿದರು.

ನಮ್ಮ ಬಳಿ ಅಡ್ಜೆಸ್ಟ್‌ಮೆಂಟ್‌ ಸಂಸ್ಕೃತಿ ಇಲ್ಲ

ಮಾಜಿ ಸಿಎಂ ಎಚ್.ಡಿ. ಕುಮಾರಸ್ವಾಮಿ ಅವರು ತಮ್ಮ ಮಗನ ಭವಿಷ್ಯದ ಬಗ್ಗೆ ಯೋಚನೆ ಮಾಡಿ ಹೀಗೆ ಮಾಡಿದ್ದಾರೆ ಎಂದು ಶಿವರಾಮೇಗೌಡ ಅವರು ಹೇಳಿರುವ ಮಾತುಗಳು ಆಡಿಯೊದಲ್ಲಿ ದಾಖಲಾಗಿರುವ ಬಗ್ಗೆ ಪ್ರತಿಕ್ರಿಯೆ ನೀಡಿದ ನಿಖಿಲ್‌ ಕುಮಾರಸ್ವಾಮಿ, ಚುನಾವಣೆಗಳಲ್ಲಿ ಅಡ್ಜಸ್ಟ್‌ಮೆಂಟ್‌ ಕೆಲವು ಸಲ ಆಗುತ್ತದೆ. ಅದು ಹೊರಗೂ ಬರುತ್ತದೆ. ಆದರೆ, ನನ್ನ ಬಗ್ಗೆ ನಮ್ಮ ತಂದೆ ಎಂದೂ ಹೀಗೆ ಯೋಚನೆ ಮಾಡಿಲ್ಲ. ನಮ್ಮ ತಂದೆ ರಾಜ್ಯದ, ಜನರ ಬಗ್ಗೆ ಯೋಚನೆ ಮಾಡ್ತಾರೆ. ಬಹಳ ಜನ ಅಡ್ಜೆಸ್ಟ್‌ಮೆಂಟ್‌ ಮಾಡಿಕೊಂಡು ಇವತ್ತು ಬಹಳ ಒಳ್ಳೇ ಸ್ಥಾನದಲ್ಲಿ ಇದ್ದಾರೆ. ಆದರೆ, ನಮ್ಮ ಬಳಿ ಆ ರೀತಿ ಯಾವ ಅಡ್ಜೆಸ್ಟ್‌ಮೆಂಟ್‌ ಸಂಸ್ಕೃತಿ ಇಲ್ಲ ಎಂದು ಹೇಳಿದರು.

ಶಿವರಾಮೇಗೌಡ ಮಾತನಾಡಿರುವ ಪ್ರತಿ ವಿಚಾರದಲ್ಲಿಯೂ ರಾಜ್ಯ ಸರ್ಕಾರದ ಕೈವಾಡ ಇದೆ ಎಂಬುದು ಗೊತ್ತಾಗುತ್ತದೆ. ಅವರೂ ಕೂಡಾ ಸರ್ಕಾರದ ಪ್ರಮುಖ ವ್ಯಕ್ತಿಯೊಬ್ಬರ ಹೆಸರು ಹೇಳಿದ್ದಾರೆ ಎಂದು ಡಿಸಿಎಂ ಡಿ.ಕೆ. ಶಿವಕುಮಾರ್‌ ವಿರುದ್ಧ ಪರೋಕ್ಷವಾಗಿ ಆರೋಪ ಮಾಡಿದರು.

ಎಚ್.ಡಿ. ಕುಮಾರಸ್ವಾಮಿ ಅವರಿಗೆ ಮಗನ ಭವಿಷ್ಯದ ಚಿಂತೆ ಅಂತಾರೆ. ಎರಡು ಚುನಾವಣೆಯನ್ನು ನಾನು ಎದುರಿಸಿದ್ದೇನೆ. ಕೆಲವೊಮ್ಮೆ ಕೆಲವು ಸಂದರ್ಭದಲ್ಲಿ ಅಡ್ಜೆಸ್ಟ್‌ಮೆಂಟ್‌ ಒಳಗೆ ಹೊರಗೆ ಆಗುತ್ತದೆ. ಆದರೆ, ನಮ್ಮ ವಿಚಾರದಲ್ಲಿ ಹೀಗೆ ಆಗಲಿಲ್ಲ. ನನ್ನ ವಿಷಯದಲ್ಲಿ ದೊಡ್ಡ ಮಟ್ಟದಲ್ಲಿ ಕೂರಿಸಬೇಕು ಅನ್ನೋ ಚಿಂತನೆ ಕುಮಾರಣ್ಣರಿಗೆ ಇಲ್ಲ. ಅವರಿಗೆ ರಾಜ್ಯದ ಜನತೆ ಬಗ್ಗೆ ಇದ್ದ ಕಮಿಟ್ಮೆಂಟ್, ಬದ್ಧತೆ ಹಿನ್ನೆಲೆಯಲ್ಲಿ ಅವರು ಯಾವುದೇ ರೀತಿಯ ಯೋಚನೆಯನ್ನು ಮಾಡಲಿಲ್ಲ. ನಾನು ಸೋತ ಬಳಿಕವೂ ರಾಮನಗರ, ಮಂಡ್ಯದಲ್ಲಿ ಓಡಾಡುತ್ತಿದ್ದೇನೆ. ಅನೇಕ ರಾಜಕಾರಣಿ ಮಕ್ಕಳು ಅಡ್ಜೆಸ್ಟ್‌ಮೆಂಟ್‌ ಮೂಲಕ ಉತ್ತಮ ಸ್ಥಾನಗಳಲ್ಲಿದ್ದಾರೆ. ನನಗೆ ಹಾಗೇ ಆಗಿಲ್ಲ. ನಾನು ಒಬ್ಬನೇ ಓಡಾಡುತ್ತಿದ್ದೇನೆ ಎಂದು ನಿಖಿಲ್‌ ಕುಮಾರಸ್ವಾಮಿ ಹೇಳಿದರು.

ಇದನ್ನೂ ಓದಿ: CM Siddaramaiah: ಸರ್ಕಾರಕ್ಕೆ ಒಂದು ವರ್ಷ; ಹಲವು ಕನಸು ಬಿಚ್ಚಿಟ್ಟ ಸಿಎಂ ಸಿದ್ದರಾಮಯ್ಯ! ಮಾಧ್ಯಮ ಸಂವಾದದ ಲೈವ್‌ ಇಲ್ಲಿದೆ

ನೂರು ಕೋಟಿ ರೂಪಾಯಿ ಆಫರ್ ವಿಚಾರವೂ ತನಿಖೆ ಆಗಬೇಕು

ಶಿವರಾಮೇಗೌಡ ಒಬ್ಬ ಸರ್ಕಾರದ ವ್ಯಕ್ತಿಯ ಹೆಸರನ್ನು ಉಲ್ಲೇಖಿಸುತ್ತಾರೆ. ಹಾಸನದ ಸಂಸದರ ವಿಡಿಯೊ ರಿಲೀಸ್ ಆದ ಬಳಿಕ ಸಂತ್ರಸ್ತೆ ಮುಖವನ್ನು ಬ್ಲರ್ ಮಾಡಲಿಲ್ಲ. ಸಂಸದರ ಮೇಲೆ ಆರೋಪ ಕೇಳಿಬಂದಿದೆ. ಆರೋಪಿ ಅದನ್ನು ಎದುರಿಸಲಿ. ಆದರೆ, ಸಂತ್ರಸ್ತೆಯರ ವಿಡಿಯೊ ಬಿಡುಗಡೆ ಮಾಡಿ ಮಾನ ಹರಾಜು ಮಾಡೋದು ಯಾಕೆ? ವಿಡಿಯೊ ರಿಲೀಸ್ ಮಾಡಿದವರ ಬಗ್ಗೆ ಕ್ರಮ ಯಾಕೆ ಆಗುತ್ತಿಲ್ಲ. ನೂರು ಕೋಟಿ ರೂಪಾಯಿ ಆಫರ್ ವಿಚಾರವೂ ತನಿಖೆ ಆಗಬೇಕು ಎಂದು ನಿಖಿಲ್‌ ಕುಮಾರಸ್ವಾಮಿ ಆಗ್ರಹಿಸಿದರು.

Continue Reading

ರಾಜಕೀಯ

CM Siddaramaiah: ಸರ್ಕಾರಕ್ಕೆ ಒಂದು ವರ್ಷ; ಹಲವು ಕನಸು ಬಿಚ್ಚಿಟ್ಟ ಸಿಎಂ ಸಿದ್ದರಾಮಯ್ಯ! ಮಾಧ್ಯಮ ಸಂವಾದದ ಲೈವ್‌ ಇಲ್ಲಿದೆ

CM Siddaramaiah: ನಮ್ಮ ಸರ್ಕಾರವನ್ನು ಒಂದು ವರ್ಷಗಳ ಕಾಲ ಯಶಸ್ವಿಯಾಗಿ ಮುನ್ನಡೆಸಿದ್ದು, ರಾಜ್ಯದ ಏಳು ಕೋಟಿ ಕನ್ನಡಿಗರಿಗೆ ತುಂಬು ಹೃದಯದ ಧನ್ಯವಾದಗಳು. ಕಾಂಗ್ರೆಸ್ ಪಕ್ಷದ ಮೇಲೆ ವಿಶ್ವಾಸ ಇಟ್ಟು ಅಭದ್ರತೆಯ ಆತಂಕ ಇರಲೇಬಾರದೆಂದು ಸ್ಪಷ್ಟವಾದ ಬಹುಮತವನ್ನು ಕೊಟ್ಟು ಸರ್ಕಾರ ರಚನೆಗೆ ಅವಕಾಶ ಕೊಟ್ಟಿದ್ದು ರಾಜ್ಯದ ಮತದಾರರ ಪ್ರಜ್ಞಾವಂತಿಕೆಯಾಗಿದೆ ಎಂದು ಸಿಎಂ ಸಿದ್ದರಾಮಯ್ಯ ಮೆಚ್ಚುಗೆ ವ್ಯಕ್ತಪಡಿಸಿದ್ದಾರೆ.

VISTARANEWS.COM


on

One year for the government Cm Siddaramaiah reveals many dreams and media interaction live
Koo

ಬೆಂಗಳೂರು: ಇಂದಿಗೆ (ಮೇ 20) ರಾಜ್ಯದಲ್ಲಿ ಕಾಂಗ್ರೆಸ್ ಸರ್ಕಾರಕ್ಕೆ ಒಂದು ವರ್ಷ ತುಂಬಿದ ಹಿನ್ನೆಲೆಯಲ್ಲಿ ಮುಖ್ಯಮಂತ್ರಿ ಸಿದ್ದರಾಮಯ್ಯ (CM Siddaramaiah) ಅವರು ಮಾಧ್ಯಮದ ಸಂವಾದದ ಮೂಲಕ ರಾಜ್ಯದ ಜನರಿಗೆ ಧನ್ಯವಾದ ಹೇಳಿದ್ದಾರೆ. ಸ್ಪಷ್ಟವಾದ ಬಹುಮತವನ್ನು ಕೊಟ್ಟು ಸರ್ಕಾರ ರಚನೆಗೆ ಅವಕಾಶ ಕೊಟ್ಟಿದ್ದು ರಾಜ್ಯದ ಮತದಾರರ ಪ್ರಜ್ಞಾವಂತಿಕೆ ಎಂದು ಹೇಳಿದ್ದಾರೆ. ಅಲ್ಲದೆ, ರಾಜ್ಯವನ್ನು ಸುಖಿ ಮತ್ತು ಸ್ವಾವಲಂಬಿಯನ್ನಾಗಿ ಮಾಡುವ ಗುರಿ ಇದೆ ಎಂದು ಹೇಳಿದ್ದಾರೆ.

ನಮ್ಮ ಸರ್ಕಾರವನ್ನು ಒಂದು ವರ್ಷಗಳ ಕಾಲ ಯಶಸ್ವಿಯಾಗಿ ಮುನ್ನಡೆಸಿದ್ದು, ರಾಜ್ಯದ ಏಳು ಕೋಟಿ ಕನ್ನಡಿಗರಿಗೆ ತುಂಬು ಹೃದಯದ ಧನ್ಯವಾದಗಳು. ಕಾಂಗ್ರೆಸ್ ಪಕ್ಷದ ಮೇಲೆ ವಿಶ್ವಾಸ ಇಟ್ಟು ಅಭದ್ರತೆಯ ಆತಂಕ ಇರಲೇಬಾರದೆಂದು ಸ್ಪಷ್ಟವಾದ ಬಹುಮತವನ್ನು ಕೊಟ್ಟು ಸರ್ಕಾರ ರಚನೆಗೆ ಅವಕಾಶ ಕೊಟ್ಟಿದ್ದು ರಾಜ್ಯದ ಮತದಾರರ ಪ್ರಜ್ಞಾವಂತಿಕೆಯಾಗಿದೆ ಎಂದು ಸಿಎಂ ಸಿದ್ದರಾಮಯ್ಯ ಮೆಚ್ಚುಗೆ ವ್ಯಕ್ತಪಡಿಸಿದ್ದಾರೆ.

ಭ್ರಷ್ಟಾಚಾರ, ದುರಾಡಳಿತ ಮತ್ತು ಕೋಮುವಾದಗಳಿಂದಾಗಿ ನಲುಗಿಹೋಗಿದ್ದ ರಾಜ್ಯದ ಆಡಳಿತವನ್ನು ಮತ್ತೆ ಸರಿದಾರಿಗೆ ತರುವ ದೊಡ್ಡ ಜವಾಬ್ದಾರಿಗೆ ಹೆಗಲು ಕೊಟ್ಟಾಗ ಅದರ ಭಾರದ ಅರಿವು ನಮಗಿತ್ತು. ಜನತೆಗೆ ನೀಡಿದ ಭರವಸೆಯನ್ನು ಈಡೇರಿಸಲು ನಾವು ಹೋರಾಟವನ್ನೇ ಮಾಡಬೇಕಾಯಿತು. ನಮ್ಮ ಕೈಗಳ ಬಲಕುಂದಿಸಲು ಸಾಧ್ಯವಿರುವ ಎಲ್ಲ ಪ್ರಯತ್ನಗಳನ್ನು ಕೇಂದ್ರ ಸರ್ಕಾರದ ಜತೆಗೂಡಿ ರಾಜ್ಯ ಬಿಜೆಪಿ ನಡೆಸಿದೆ. ಇಂತಹ ಸವಾಲುಗಳ ನಡುವೆಯೂ ನಮ್ಮ ಐದು ಗ್ಯಾರಂಟಿಗಳನ್ನು ಅನುಷ್ಠಾನಕ್ಕೆ ತಂದು ನಮ್ಮ ಮಾತನ್ನು ಉಳಿಸಿಕೊಂಡಿದ್ದೇವೆ ಎಂದು ಸಿಎಂ ಸಿದ್ದರಾಮಯ್ಯ ಹೇಳಿದ್ದಾರೆ.

ಇದನ್ನೂ ಓದಿ: Prajwal Revanna Case: ಪೆನ್‌ಡ್ರೈವ್‌ ಕೇಸ್‌ಗೆ ಟ್ವಿಸ್ಟ್;‌ ದೇವರಾಜೇಗೌಡ, ಡಿಕೆಶಿ ಆಡಿಯೊ ಬಯಲು, ಇಲ್ಲಿದೆ ಸ್ಫೋಟಕ ಮಾಹಿತಿ

ಅಭಿವೃದ್ಧಿಯ ಕಾಯಕವನ್ನು ನಮಗೆ ಬಿಡಿ

ನಮ್ಮ ಸಂಕಲ್ಪ ಕೇವಲ ಗ್ಯಾರಂಟಿ ಯೋಜನೆಗಳಲ್ಲ. ಅಭಿವೃದ್ಧಿಯ ರಥವನ್ನು ಗ್ಯಾರಂಟಿಗಳ ಆಚೆಗೆ ಕೊಂಡೊಯ್ದು ರಾಜ್ಯವನ್ನು ಸುಖಿ ಮತ್ತು ಸ್ವಾವಲಂಬಿಯನ್ನಾಗಿ ಮಾಡುವುದಾಗಿದೆ. ಸಾಧನೆಯ ಬಲದಲ್ಲಿ ನಮ್ಮನ್ನು ಎದುರಿಸಲಾಗದ ನಮ್ಮ ವಿರೋಧ ಪಕ್ಷಗಳು ಜಾತಿ – ಧರ್ಮಗಳನ್ನು ರಾಜಕೀಯದ ಅಸ್ತ್ರಗಳನ್ನಾಗಿ ಬಳಸಿಕೊಂಡು ನಮ್ಮ ಮೇಲೆ ಎರಗುತ್ತಿದ್ದಾರೆ. ರಾಜ್ಯದ ಪ್ರಜ್ಞಾವಂತ ಜನತೆ ಈ ವಿಭಜನಕಾರಿ ಮತ್ತು ವಿನಾಶಕಾರಿ ಅಜೆಂಡಾಗೆ ಬಲಿಯಾಗದೆ ರಾಜ್ಯವನ್ನು ಸರ್ವಜನಾಂಗದ ಶಾಂತಿಯ ತೋಟವನ್ನಾಗಿಯೇ ಉಳಿಸಿಕೊಳ್ಳಲು ಸಹಕರಿಸಬೇಕೆಂದಷ್ಟೇ ನನ್ನ ಕೋರಿಕೆಯಾಗಿದೆ. ಉಳಿದಂತೆ ರಾಜ್ಯದ ಸರ್ವತೋಮುಖ ಅಭಿವೃದ್ಧಿಯ ಕಾಯಕವನ್ನು ನಮಗೆ ಬಿಟ್ಟು ಬಿಡಿ. ನುಡಿದಂತೆ ನಡೆದಿದ್ದೆವು, ನುಡಿದಂತೆ ನಡೆಯುತ್ತಿರುವೆವು, ಮುಂದೆಯೂ ನುಡಿದಂತೆಯೇ ನಡೆಯುವೆವು ಎಂದು ಸಿಎಂ ಸಿದ್ದರಾಮಯ್ಯ ಭರವಸೆಯನ್ನು ನೀಡಿದ್ದಾರೆ.

ಸಿಎಂ ಮಾಧ್ಯಮ ಸಂವಾದ; ಲೈವ್‌ಗಾಗಿ ಇಲ್ಲಿ ವೀಕ್ಷಿಸಿ

ಸೋಮವಾರ ಮಾಧ್ಯಮದವರೊಂದಿಗೆ ಸಂವಾದ ನಡೆಸಿದ ಸಿಎಂ ಸಿದ್ದರಾಮಯ್ಯ, ರಾಜ್ಯ ಸರ್ಕಾರದ ಗ್ಯಾರಂಟಿ ಯೋಜನೆಗಳ ಬಗ್ಗೆ ವಿಸ್ತೃತ ಮಾಹಿತಿ ನೀಡಿದರು.

ನುಡಿದಂತೆ ನಡೆದಿದ್ದೇವೆ, ರಾಜ್ಯವನ್ನು ಅಭಿವೃದ್ಧಿ ಪಥದತ್ತ ಕೊಂಡೊಯ್ಯುತ್ತಿದ್ದೇವೆ ಎಂದು ಹೇಳಿದರು. ಅಲ್ಲದೆ, ಗೃಹ ಜ್ಯೋತಿ, ಗೃಹ ಲಕ್ಷ್ಮಿ, ಅನ್ನಭಾಗ್ಯ, ಶಕ್ತಿ ಎಂಬಿತ್ಯಾದಿ ಯೋಜನೆಗಳ ಬಗ್ಗೆ ಅಂಕಿ-ಅಂಶಗಳ ಸಹಿತ ಮಾಹಿತಿ ನೀಡಿದರು.

Continue Reading
Advertisement
road Accident in Mandya
ಮಂಡ್ಯ3 mins ago

Road Accident : ಬಸ್‌ ಗುದ್ದಿದ ರಭಸಕ್ಕೆ ಕಾರು ಛಿದ್ರ ಛಿದ್ರ; ಚಾಲಕ ಸ್ಪಾಟ್‌ ಡೆತ್‌, ನಾಲ್ವರಿಗೆ ಗಾಯ

CET result only after II PU 2nd exam Published on May 30 or 31
ಶಿಕ್ಷಣ3 mins ago

CET Result: ದ್ವಿತೀಯ ಪಿಯು 2ನೇ ಪರೀಕ್ಷೆ ಬಳಿಕವೇ ಸಿಇಟಿ ಫಲಿತಾಂಶ; ಮೇ 30 ಅಥವಾ 31ಕ್ಕೆ ಪ್ರಕಟ?

pretha maduve
ಧಾರ್ಮಿಕ5 mins ago

Pretha Maduve: ವಧುವಿನ ಆತ್ಮಕ್ಕೆ ದೊರೆತ ವರ, ಆಷಾಢದಲ್ಲಿ ʻಪ್ರೇತ ಮದುವೆ’ ಫಿಕ್ಸ್

Kannada New Movie Hondisi Bareyiri in youtube
ಸಿನಿಮಾ17 mins ago

Kannada New Movie: ಯೂಟ್ಯೂಬ್‌ನಲ್ಲಿ ಉಚಿತವಾಗಿ ನೋಡಬಹುದು ʻಹೊಂದಿಸಿ ಬರೆಯಿರಿʼ; ಆದರೆ ಇರಲಿದೆ ಬ್ಯಾಂಕ್ ಡಿಟೇಲ್ಸ್‌!

Prajwal should appear before SIT and face probe says Nikhil Kumaraswamy
ಕರ್ನಾಟಕ24 mins ago

Nikhil Kumaraswamy: ಪ್ರಜ್ವಲ್‌ ಎಸ್‌ಐಟಿ ಮುಂದೆ ಹಾಜರಾಗಿ ತನಿಖೆ ಎದುರಿಸುವುದೇ ಸೂಕ್ತ: ನಿಖಿಲ್‌ ಕುಮಾರಸ್ವಾಮಿ

Karnataka Rain
ಮಳೆ27 mins ago

Karnataka Rain : ಬಂಗಾಳ ಕೊಲ್ಲಿಯಲ್ಲಿ ವಾಯುಭಾರ ಕುಸಿತ; ಸಮುದ್ರಕ್ಕಿಳಿಯದಂತೆ ಮೀನುಗಾರರಿಗೆ ಎಚ್ಚರಿಕೆ

Survival Story
ವಿದೇಶ38 mins ago

Survival Story: ಆ 17 ದಿನಗಳು…ಥೈಲ್ಯಾಂಡ್‌ನ ಥಾಮ್ ಲುವಾಂಗ್ ಗುಹೆಯಲ್ಲಿ ಸಿಕ್ಕಿಬಿದ್ದ 13 ಮಂದಿಯ ರಕ್ಷಣೆಯ ರೋಚಕ ಕಹಾನಿ

Lok Sabha Election 2024
ದೇಶ39 mins ago

Lok Sabha Election 2024: ರ್‍ಯಾಲಿಯಲ್ಲಿ ಕಾಲ್ತುಳಿತದ ಸ್ಥಿತಿ ನಿರ್ಮಾಣ; ಭಾಷಣ ಮಾಡದೇ ವೇದಿಕೆಯಿಂದ ತೆರಳಿದ ರಾಹುಲ್‌, ಅಖಿಲೇಶ್‌

ಲಕ್ಕೂರು ಆನಂದ lakkuru Anand
ಶ್ರದ್ಧಾಂಜಲಿ1 hour ago

ಕೇಂದ್ರ ಸಾಹಿತ್ಯ ಅಕಾಡೆಮಿ ಪುರಸ್ಕೃತ ಕವಿ ಲಕ್ಕೂರು ಆನಂದ ನಿಧನ, ಅನುಮಾನಾಸ್ಪದ ಸಾವು ಕೇಸು

Prajwal Revanna Case Shivarame Gowdas Deve Gowda suicide statement says Nikhil Kumaraswamy
ರಾಜಕೀಯ1 hour ago

Prajwal Revanna Case: ಶಿವರಾಮೇಗೌಡರ ದೇವೇಗೌಡ ಆತ್ಮಹತ್ಯೆ ಹೇಳಿಕೆ; ನಿಖಿಲ್‌ ಕುಮಾರಸ್ವಾಮಿ ಕೆಂಡ

Sharmitha Gowda in bikini
ಕಿರುತೆರೆ8 months ago

Geetha Serial Kannada: ನಿದ್ದೆ ಕದ್ದ ಚೋರಿ! ನಟಿ `ಭಾನುಮತಿ’ ಹಾಟ್‌ ಪೋಟೊಗಳಿಗೆ ಫ್ಯಾನ್ಸ್ ಫುಲ್ ಫಿದಾ

Kannada Serials
ಕಿರುತೆರೆ7 months ago

Kannada Serials TRP: 2ನೇ ಸ್ಥಾನದಲ್ಲಿ 2 ಧಾರಾವಾಹಿಗಳು; ಟಿಆರ್‌ಪಿ ರೇಸ್‌ನಲ್ಲಿಲ್ಲ ಭಾಗ್ಯಲಕ್ಷ್ಮೀ!

Bigg Boss- Saregamapa 20 average TRP
ಕಿರುತೆರೆ7 months ago

Kannada Serials TRP: ಏಳನೇ ಸ್ಥಾನಕ್ಕೆ ʻಅಮೃತಧಾರೆʼ ಕುಸಿತ; ಬಿಗ್‌ ಬಾಸ್‌-ಸರಿಗಮಪ ಟಿಆರ್‌ಪಿ ಎಷ್ಟು?

galipata neetu
ಕಿರುತೆರೆ6 months ago

Kanyadana Serial: ಕಿರುತೆರೆಗೆ ಮತ್ತೆ ಎಂಟ್ರಿ ಕೊಟ್ಟ ʻಗಾಳಿಪಟʼ ಖ್ಯಾತಿಯ ʻನೀತುʼ!

Kannada Serials
ಕಿರುತೆರೆ8 months ago

Kannada Serials TRP: ನಾಲ್ಕನೇ ಸ್ಥಾನಕ್ಕೆ ಕುಸಿತ ಕಂಡ ʻಸೀತಾ ರಾಮʼ; ಟಿಆರ್‌ಪಿ ರೇಸ್‌ಗೆ ʻಭಾಗ್ಯಲಕ್ಷ್ಮಿʼ ಬ್ಯಾಕ್‌!

Kannada Serials
ಕಿರುತೆರೆ8 months ago

Kannada Serials TRP: ಟಿಆರ್‌ಪಿಯಲ್ಲಿ ʻಭಾಗ್ಯಲಕ್ಷ್ಮೀʼ ಹವಾ; ʻಪುಟ್ಟಕ್ಕನ ಮಕ್ಕಳುʼ ಧಾರಾವಾಹಿಗೆ ಸಂಕಷ್ಟ!

Bigg Boss' dominates TRP; Sita Rama fell to the sixth position
ಕಿರುತೆರೆ7 months ago

Kannada Serials TRP: ಟಿಆರ್‌ಪಿಯಲ್ಲಿ ʻಬಿಗ್ ಬಾಸ್ʼದೇ ಮೇಲುಗೈ; 6ನೇ ಸ್ಥಾನಕ್ಕೆ ಕುಸಿದ ʻಸೀತಾ ರಾಮʼ

geetha serial Dhanush gowda engagement
ಕಿರುತೆರೆ5 months ago

Dhanush Gowda: ಗೀತಾ ಧಾರಾವಾಹಿ ನಟನ ನಿಶ್ಚಿತಾರ್ಥ; ಭವ್ಯಾಳ ಕಮೆಂಟ್‌ ಬಾಕ್ಸ್‌ ಆಫ್‌!

varun
ಕಿರುತೆರೆ6 months ago

Brindavana Serial: ʼಬೃಂದಾವನʼ ಧಾರಾವಾಹಿಯಲ್ಲಿ ದೊಡ್ಡ ಟ್ವಿಸ್ಟ್‌; ಪ್ರಮುಖ ಪಾತ್ರಧಾರಿಯೇ ಬದಲು

Kannada Serials
ಕಿರುತೆರೆ8 months ago

Kannada Serials TRP: ಟಿಆರ್‌ಪಿಯಲ್ಲಿ ಏರಿಕೆ ಕಂಡ ʻಅಮೃತಧಾರೆʼ; ʻಗಟ್ಟಿಮೇಳʼಕ್ಕೆ ನಾಲ್ಕನೇ ಸ್ಥಾನ!

Karnataka Rain
ಮಳೆ27 mins ago

Karnataka Rain : ಬಂಗಾಳ ಕೊಲ್ಲಿಯಲ್ಲಿ ವಾಯುಭಾರ ಕುಸಿತ; ಸಮುದ್ರಕ್ಕಿಳಿಯದಂತೆ ಮೀನುಗಾರರಿಗೆ ಎಚ್ಚರಿಕೆ

Karnataka Rain
ಮಳೆ22 hours ago

Karnataka Rain : ಒಂದೇ ಮಳೆಗೆ ಹೊಳೆಯಂತಾದ ಬೆಂಗಳೂರು ರಸ್ತೆಗಳು! ಕಳಸದಲ್ಲೂ ಮುಂದುವರಿದ ಅಬ್ಬರ

Karnataka rain
ಮಳೆ23 hours ago

Karnataka Rain : ವಿಜಯನಗರದಲ್ಲಿ ಸಿಡಿಲಿಗೆ ಜಾನುವಾರು ಬಲಿ; ಬೆಂಗಳೂರು ಸೇರಿ ಹಲವೆಡೆ ಭಾರಿ ಮಳೆ

Karnataka Rain
ಮಳೆ1 day ago

Karnataka Rain: ಧಾರಾಕಾರ ಮಳೆಗೆ ಕಾಂಪೌಂಡ್ ಕುಸಿದು 4 ಬೈಕ್‌ಗಳು ಜಖಂ; ಮದುವೆ ಮಂಟಪಕ್ಕೆ ನುಗ್ಗಿದ ನೀರು‌

Prajwal Revanna Case JDS calls CD Shivakumar pen drive gang
ರಾಜಕೀಯ3 days ago

Prajwal Revanna Case: CD ಶಿವಕುಮಾರ್ ಪೆನ್ ಡ್ರೈವ್ ಗ್ಯಾಂಗ್ ಎಂದ ಕುಟುಕಿದ ಜೆಡಿಎಸ್‌!

Karnataka weather Forecast
ಮಳೆ3 days ago

Karnataka Weather : ಮೈಸೂರು, ಮಂಡ್ಯ ಸೇರಿ ಈ 7 ಜಿಲ್ಲೆಗಳಲ್ಲಿ ವ್ಯಾಪಕ ಮಳೆ ಸಂಭವ

Dina Bhavishya
ಭವಿಷ್ಯ3 days ago

Dina Bhavishya : ಈ ರಾಶಿಯ ಪ್ರೇಮಿಗಳಿಗೆ ಮನೆಯಿಂದ ಸಿಗುತ್ತೆ ಗ್ರೀನ್‌ ಸಿಗ್ನಲ್‌

Karnataka Weather Forecast
ಮಳೆ4 days ago

Karnataka Weather : ಭಾರಿ ಮಳೆಗೆ ಕೊಟ್ಟೂರು ಬಸ್ ಸ್ಟ್ಯಾಂಡ್‌ ಜಲಾವೃತ; ‌ ತಾಯಿ-ಮಗ ಗ್ರೇಟ್‌ ಎಸ್ಕೇಪ್‌

Drowned in water
ಹಾಸನ4 days ago

Drowned in water : ಕೆರೆಯಲ್ಲಿ ಈಜಲು ಹೋದ ನಾಲ್ವರು ನೀರುಪಾಲು; ಓರ್ವ ಬಾಲಕ ಪಾರು

Suspicious Case
ಬೆಂಗಳೂರು4 days ago

Suspicious Case : ಬಾತ್‌ ರೂಂನಲ್ಲಿತ್ತು ಕಾಲೇಜು ಹುಡುಗಿ ಡೆಡ್‌ ಬಾಡಿ; ಕುತ್ತಿಗೆ ಕೊಯ್ದು ಸಾಯಿಸಿದವರು ಯಾರು?

ಟ್ರೆಂಡಿಂಗ್‌