Kannada Serials TRP: ಟಾಪ್‌ 5ನಲ್ಲಿ ಇಲ್ಲ ʻಶ್ರೀರಸ್ತು ಶುಭಮಸ್ತುʼ: ರೇಸ್‌ಗಿಳಿದ ʻರಾಮಾಚಾರಿʼ! - Vistara News

ಕಿರುತೆರೆ

Kannada Serials TRP: ಟಾಪ್‌ 5ನಲ್ಲಿ ಇಲ್ಲ ʻಶ್ರೀರಸ್ತು ಶುಭಮಸ್ತುʼ: ರೇಸ್‌ಗಿಳಿದ ʻರಾಮಾಚಾರಿʼ!

Kannada Serials TRP: ಟಾಪ್‌ 5ನಲ್ಲಿ ಕಲರ್ಸ್‌ ಕನ್ನಡದ ಒಂದು ಧಾರಾವಾಹಿಗಳೂ ಇಲ್ಲ. ಆದರೆ ಕಲರ್ಸ್‌ ಕನ್ನಡದ ʻರಾಮಾಚಾರಿʼ ಧಾರಾವಾಹಿ ನಿಧಾನವಾಗಿ ಉಳಿದ ಧಾರಾವಾಹಿಗಳಿಗೆ ಪೈಪೋಟಿ ನೀಡಲು ಶುರು ಮಾಡಿದೆ.

VISTARANEWS.COM


on

Kannada Serial TRP News Kannada Serial Update
ಮಹತ್ವದ, ಕುತೂಹಲಕರ ಸುದ್ದಿಗಾಗಿ ಫಾಲೊ ಮಾಡಿ
Koo

ಬೆಂಗಳೂರು: ಈ ವಾರ ಧಾರಾವಾಹಿಗಳ ಟಿಆರ್‌ಪಿ (Kannada Serials TRP) ಲಿಸ್ಟ್‌ ಹೊರಬಿದ್ದಿದೆ. ಈ ವಾರ ಟಾಪ್ ಐದು ಧಾರಾವಾಹಿಗಳ ಸಾಲಿನಲ್ಲಿ ಎಲ್ಲವೂ ಜೀ ಕನ್ನಡದ ಧಾರಾವಾಹಿಗಳೇ. ಟಾಪ್‌ 5ನಲ್ಲಿ ಕಲರ್ಸ್‌ ಕನ್ನಡದ ಒಂದು ಧಾರಾವಾಹಿಯೂ ಇಲ್ಲ. ಆದರೆ ಕಲರ್ಸ್‌ ಕನ್ನಡದ ʻರಾಮಾಚಾರಿʼ ಧಾರಾವಾಹಿ ನಿಧಾನವಾಗಿ ಉಳಿದ ಧಾರಾವಾಹಿಗಳಿಗೆ ಪೈಪೋಟಿ ನೀಡಲು ಶುರು ಮಾಡಿದೆ.

ಲಕ್ಷ್ಮೀ ನಿವಾಸ

ಮನೆ ಕಟ್ಟಿ ನೋಡು, ಮದುವೆ ಮಾಡಿ ನೋಡು ಎನ್ನುವ ಮಾತನ್ನೇ ಎಳೆಯಾಗಿಟ್ಟುಕೊಂಡು ಕಥೆಯನ್ನು ಹೆಣೆದಿರುವ ಜೀ ಕನ್ನಡ ವಾಹಿನಿಯ ಹೊಸ ಧಾರಾವಾಹಿ ‘ಲಕ್ಷ್ಮೀ ನಿವಾಸ’ ಕರುನಾಡಿನ ಮನೆಮನಗಳಿಗೆ ಪ್ರವೇಶ ಮಾಡಿದ್ದಾಗಿದೆ. ನಗರ ಭಾಗದ ಟಿಆರ್​ಪಿ ಪರಿಗಣಿಸಿದರೆ ಮೊದಲ ಸ್ಥಾನದಲ್ಲಿ ಜೀ ಕನ್ನಡದಲ್ಲಿ ಪ್ರಸಾರ ಕಾಣುತ್ತಿರುವ ಹೊಸ ಧಾರಾವಾಹಿ ‘ಲಕ್ಷ್ಮಿ ನಿವಾಸ’ ಇದೆ. ಸಾಯಿ ನಿರ್ಮಲ ಪ್ರೊಡಕ್ಷನ್‌ ಸಂಸ್ಥೆಯ ನಿರ್ಮಾಣ, ಆದರ್ಶ್ ಉಮೇಶ್ ಹೆಗಡೆ ನಿರ್ದೇಶನ ಈ ಧಾರಾವಾಹಿಗೆ ಇರಲಿದೆ. ಕಿರುತೆರೆಯಲ್ಲಿ ಈ ಹಿಂದೆ ಹೀರೊ ಹೀರೋಯಿನ್‌ಗಳಾಗಿ‌ ಮಿಂಚಿದ್ದ ಹಲವು ಅನುಭವಿ ಕಲಾವಿದರು ಈ ಧಾರಾವಾಹಿಯ ಮುಖ್ಯಭೂಮಿಕೆಯಲ್ಲಿದ್ದಾರೆ. ಸದ್ಯ ಜಾಹ್ನವಿಯನ್ನು ವಿಶ್ವ ಮನಸಾರೆ ಪ್ರೀತಿ ಮಾಡುತ್ತಾ ಇದ್ದರೂ ವಿಶ್ವನಿಗೆ ವಿಲನ್ ಆಗಿ ಜಯಂತ್ ಬಂದಾಗಿದೆ. ಆದರೂ ಜಾಹ್ನವಿಗೆ ವಿಶ್ವನೇ ಜೋಡಿ ಎನ್ನುತ್ತಿದ್ದಾರೆ ವೀಕ್ಷಕರು. ಇದೀಗ ಈ ಧಾರಾವಾಹಿ ಜೀ ಕನ್ನಡದಲ್ಲಿ ಪ್ರಸಾರ ಕಾಣುತ್ತಿದೆ.ಈ ಧಾರಾವಾಹಿ ನಗರ ಹಾಗೂ ರಾಜ್ಯದ ಟಿಆರ್​ಪಿಯಲ್ಲಿ ಮೊದಲ ಸ್ಥಾನ ಪಡೆದು ಮುನ್ನುಗ್ಗುತ್ತಿದೆ.ಈ ಧಾರಾವಾಹಿಗೆ ಒಟ್ಟಾರೆಯಾಗಿ ಭರ್ಜರಿ ಟಿಆರ್​ಪಿ ಸಿಗುತ್ತಿದೆ. ಈ ಧಾರಾವಾಹಿ ಮೊದಲ ಸ್ಥಾನದಲ್ಲಿ ಮುಂದುವರಿದಿದೆ. ನಗರ ಹಾಗೂ ಗ್ರಾಮಗಳ ಭಾಗದ ಜನರಿಗೆ ಧಾರಾವಾಹಿ ಹೆಚ್ಚು ಇಷ್ಟ ಆಗಿದೆ.

ಇದನ್ನೂ ಓದಿ: Kannada Serials TRP: ‘ಲಕ್ಷ್ಮೀ ನಿವಾಸ’ಕ್ಕೆ ಮೊದಲ ಸ್ಥಾನ: ಟಾಪ್‌ 5ನಲ್ಲಿ ಇಲ್ಲ ʻಭಾಗ್ಯಲಕ್ಷ್ಮೀʼ!

ಪುಟ್ಟಕ್ಕನ ಮಕ್ಕಳು

ಪುಟ್ಟಕ್ಕನ ಮಕ್ಕಳು ಧಾರಾವಾಹಿ ಶುರುವಾಗಿ ಎರಡು ವರ್ಷಗಳು ಸಂದಿದೆ. ಉಮಾಶ್ರೀ, ಸಂಜನಾ ಬುರ್ಲಿ, ಧನುಷ್ ಎನ್​ಎಸ್ ಮೊದಲಾದವರು ಈ ಧಾರಾವಾಹಿಯಲ್ಲಿ ನಟಿಸುತ್ತಿದ್ದಾರೆ. ಲಕ್ಷ್ಮಿ ನಿವಾಸ’ ಧಾರಾವಾಹಿ ಆರಂಭಕ್ಕೂ ಮೊದಲು ‘ಪುಟ್ಟಕ್ಕನ ಮಕ್ಕಳು’ ಧಾರಾವಾಹಿ ಮೊದಲ ಸ್ಥಾನ ಕಾಯ್ದುಕೊಂಡು ಬಂದಿತ್ತು. ಈಗ ಧಾರಾವಾಹಿಗೆ ಎರಡನೇ ಸ್ಥಾನ ಸಿಕ್ಕಿದೆ. ಜೀ ವಾಹಿನಿಯಲ್ಲಿ ಪ್ರಸಾರ ಕಾಣುತ್ತಿದೆ.

ಅಮೃತಧಾರೆ

‘ಅಮೃತಧಾರೆ’ ಧಾರಾವಾಹಿ ಸಾಕಷ್ಟು ಟ್ವಿಸ್ಟ್​ಗಳನ್ನು ಪಡೆದು ಸಾಗುತ್ತಿದೆ. ಛಾಯಾ ಸಿಂಗ್ ಹಾಗೂ ರಾಜೇಶ್ ನಟರಂಗ ಅವರ ಕಾಂಬಿನೇಷನ್ ಜನರಿಗೆ ಇಷ್ಟ ಆಗಿದೆ. ಈ ಧಾರಾವಾಹಿ ಟಿಆರ್​ಪಿ ಹಿಂದಿನ ವಾರ ಐದನೇ ಸ್ಥಾನದಲ್ಲಿ ಇತ್ತು. ಜೀ ವಾಹಿನಿಯಲ್ಲಿ ಪ್ರಸಾರ ಕಾಣುತ್ತಿದೆ. ಈಗಾಗಲೇ ಭೂಮಿಕಾ ತಂಗಿ ಅಪ್ಪಿ ಪಾರ್ಥ ಜತೆ ಪ್ರೀತಿಯಲ್ಲಿ ಬಿದ್ದಿದ್ದಾಳೆ. ಈ ವಿಚಾರ ಭೂಮಿಕಾಗೆ ತಿಳಿದಿದೆ.

ಇದನ್ನೂ ಓದಿ: Kannada Serials TRP: ಭರ್ಜರಿ ಟಿಆರ್‌ಪಿ ಕಂಡ ʻಬಿಗ್‌ ಬಾಸ್‌ʼ ಫಿನಾಲೆ; ʻಲಕ್ಷ್ಮೀ ನಿವಾಸʼ ಧಾರಾವಾಹಿಯದ್ದೇ ಹವಾ!

ಸೀತಾ ರಾಮ

ಈ ಧಾರಾವಾಹಿಗೆ ನಾಲ್ಕನೇ ಸ್ಥಾನ ಸಿಕ್ಕಿದೆ. ಬಿಗ್ ಬಾಸ್’ ಪ್ರಸಾರ ಕಾಣುತ್ತಿತ್ತು. ಈ ಕಾರಣಕ್ಕೆ ‘ಸಿತಾ ರಾಮ’ ಧಾರಾವಾಹಿಗೆ ಟಿಆರ್​ಪಿ ಕಡಿಮೆ ಆಗಿತ್ತು. ಈಗ ವೀಕ್ಷಕರು ಮರಳಿದ್ದಾರೆ. ಹಿಂದಿನ ವಾರ ಮೂರನೇ ಸ್ಥಾನದಲ್ಲಿ ಇತ್ತು.

‘ಸತ್ಯ’ ಧಾರಾವಾಹಿ ಐದನೇ ಸ್ಥಾನದಲ್ಲಿ ಇದೆ. ಆರನೇ ಸ್ಥಾನದಲ್ಲಿ ಜೀ ಕನ್ನಡದ ‘ಶ್ರೀರಸ್ತು ಶುಭಮಸ್ತು’ ಹಾಗೂ ಕಲರ್ಸ್ ಕನ್ನಡದ ‘ರಾಮಾಚಾರಿ’ ಧಾರಾವಾಹಿಗಳು ಇವೆ. ‘ರಾಮಾಚಾರಿ’ ಧಾರಾವಾಹಿಯಲ್ಲಿ ರಾಮಾಚಾರಿ / ಕೃಷ್ಣ (ಕಿಲ್ಲರ್ ಕಿಟ್ಟಿ) ಆಗಿ ನಟ ರಿತ್ವಿಕ್ ಕೃಪಾಕರ್, ವೈಶಾಖ ಆಗಿ ನಟಿ ಐಶ್ವರ್ಯಾ ಸಾಲಿಮಠ, ಮಾನ್ಯತಾ ಆಗಿ ನಟಿ ಝಾನ್ಸಿ ಸುಬ್ಬಯ್ಯ, ಚಾರುಲತಾ ಆಗಿ ಮೌನಾ ಗುಡ್ಡೇಮನೆ ಅಭಿನಯಿಸುತ್ತಿದ್ದಾರೆ. ಕಲರ್ಸ್‌ ಕನ್ನಡದಲ್ಲಿ ರಾಮಾಚಾರಿ ಪ್ರಸಾರ ಕಾಣುತ್ತಿದೆ.

ಕ್ಷಣ ಕ್ಷಣದ ಮಾಹಿತಿಗಾಗಿ Vistara News FaceBook ಪೇಜ್ ಫಾಲೋ ಮಾಡಿ
ಮಹತ್ವದ ಮಾಹಿತಿಗಾಗಿ ವಿಸ್ತಾರ ನ್ಯೂಸ್ ಆ್ಯಪ್ ಉಚಿತವಾಗಿ ಡೌನ್ ಲೋಡ್ ಮಾಡಿಕೊಳ್ಳಿ: Andriod App | IOS App
Continue Reading
Click to comment

Leave a Reply

Your email address will not be published. Required fields are marked *

ಕಿರುತೆರೆ

Pavithra Jayaram: ತೆಲುಗಿನ ‘ತ್ರಿನಯನಿ’ ಧಾರಾವಾಹಿ ನಟಿ, ಕನ್ನಡತಿ ಪವಿತ್ರ ಜಯರಾಂ ಅಪಘಾತದಲ್ಲಿ ನಿಧನ

Pavithra Jayaram: ನಟಿ ಕರ್ನಾಟಕದಲ್ಲಿ ಹುಟ್ಟಿದ್ದರೂ ಕೂಡ ಹೆಚ್ಚು ಫೇಮಸ್‌ ಆದದ್ದು ತೆಲುಗಿನ ‘ತ್ರಿನಯನಿ’ ಧಾರಾವಾಹಿಯಿಂದ. . ಕನ್ನಡದ ʻರೋಬೊ ಫ್ಯಾಮಿಲಿʼ ಮೂಲಕ ಕಿರುತೆರೆಗೆ ಎಂಟ್ರಿಕೊಟ್ಟಿದ್ದ ಪವಿತ್ರ ಮೂಲತಃ ಮಂಡ್ಯ ತಾಲೂಕಿನ ಹನಕೆರೆಯವರು. ನಟಿ ರೋಬೊ ಫ್ಯಾಮಿಲಿ, ಜೋಕಾಲಿ, ನೀಲಿ, ರಾಧಾರಮಣ ಧಾರವಾಹಿಯಲ್ಲಿ ನಟಿಸಿ ಮನೆಮಾತಾಗಿದ್ದರು.

VISTARANEWS.COM


on

Pavithra Jayaram Trinayani serial Fame No More
Koo

ಬೆಂಗಳೂರು: ತೆಲುಗಿನ ‘ತ್ರಿನಯನಿ’ ಧಾರಾವಾಹಿಯಲ್ಲಿ (Trinayani serial) ಜನಪ್ರಿಯರಾಗಿರುವ ಕನ್ನಡತಿ ಪವಿತ್ರ ಜಯರಾಂ (Pavithra Jayaram) ಅಪಘಾತಕ್ಕೀಡಾಗಿ ಸ್ಥಳದಲ್ಲೇ ಮೃತಪಟ್ಟಿದ್ದಾರೆ. ಆಂಧ್ರಪ್ರದೇಶದ ಕರ್ನೂಲು ಸಮೀಪದಲ್ಲಿ ಇಂದು (ಮೇ.12) ಮುಂಜಾನೆ ಅಪಘಾತವಾಗಿದೆ ಎಂದು ವರದಿಯಾಗಿದೆ. ಮೂಲತಃ ಕನ್ನಡಿಗರಾದ ಪವಿತ್ರ ತೆಲುಗಿನ ತ್ರಿನಯನಿ ಧಾರವಾಹಿಯಲ್ಲಿ ಜನಪ್ರಿಯರಾಗಿದ್ದರು. ಕನ್ನಡದ ʻರೋಬೊ ಫ್ಯಾಮಿಲಿʼ ಮೂಲಕ ಕಿರುತೆರೆಗೆ ಎಂಟ್ರಿಕೊಟ್ಟಿದ್ದ ಪವಿತ್ರ ಮೂಲತಃ ಮಂಡ್ಯ ತಾಲೂಕಿನ ಹನಕೆರೆಯವರು. ನಟಿ ರೋಬೊ ಫ್ಯಾಮಿಲಿ, ಜೋಕಾಲಿ, ನೀಲಿ, ರಾಧಾರಮಣ ಧಾರವಾಹಿಯಲ್ಲಿ ನಟಿಸಿ ಮನೆಮಾತಾಗಿದ್ದರು.

ನಟಿ ಕರ್ನಾಟಕದಲ್ಲಿ ಹುಟ್ಟಿದ್ದರೂ ಕೂಡ ಹೆಚ್ಚು ಫೇಮಸ್‌ ಆದದ್ದು ತೆಲುಗಿನ ‘ತ್ರಿನಯನಿ’ ಧಾರಾವಾಹಿಯಿಂದ . ಈ ಬಗ್ಗೆ ನಟಿ ಈ ಹಿಂದೆ ಮಾಧ್ಯಮವೊಂದರಲ್ಲಿ ಹೇಳಿಕೊಂಡಿದ್ದರು. ʻʻನಾನು ಹುಟ್ಟಿ ಬೆಳೆದದ್ದು ಕರ್ನಾಟಕದಲ್ಲಿ. ಆದರೆ ಕನ್ನಡಕ್ಕಿಂತ ನನಗೆ ಹೆಚ್ಚು ಹೆಸರು ಕೊಟ್ಟಿದ್ದು ತೆಲುಗು. ‘ತ್ರಿನಯನಿ’ ಧಾರಾವಾಹಿ ಮುಂಚೆ ಅನೇಕ ಕನ್ನಡ ಧಾರಾವಾಹಿಯಲ್ಲಿ ನಟಿಸಿದ್ದರು ಅಷ್ಟಾಗಿ ಫಾಲೋವರ್ಸ್‌ ಇರಲಿಲ್ಲ. ಆದರೆ ‘ತ್ರಿನಯನಿ’ ಧಾರಾವಾಹಿ ಕನ್ನಡದಲ್ಲಿಯೂ ಡಬ್‌ ಆಗುತ್ತಿತ್ತು. ಹೀಗಾಗಿ ಕನ್ನಡದಲ್ಲಿಯೂ ತುಂಬಾ ಫ್ಯಾನ್ ಪೇಜ್‌ಗಳು ಶುರುವಾದವುʼʼಎಂದಿದ್ದರು.

ಇದನ್ನೂ ಓದಿ: IPL 2024: ಬೆಂಗಳೂರಲ್ಲಿಂದು ಆರ್‌ಸಿಬಿ, ಡೆಲ್ಲಿ ನಿರ್ಣಾಯಕ ಪಂದ್ಯ; ಮಳೆ ಅಡ್ಡಿ ಆಗತ್ತಾ ? ಇಲ್ಲಿದೆ ರಿಪೋರ್ಟ್

“ಅಷ್ಟೇ ಅಲ್ಲ 16ನೇ ವಯಸ್ಸಿಗೆ ಮದುವೆ ಮಾಡಿದ್ದರು. ಮ್ಯಾರೇಜ್ ಲೈಫ್ ಕೂಡ ನನ್ನದು ಅಷ್ಟಾಗಿ ಸರಿಯಿರಲಿಲ್ಲ. ಓದು ಕೂಡ ಅರ್ಧಕ್ಕೆ ಮುಗಿದಿತ್ತು. ಚಿಕ್ಕ ಚಿಕ್ಕ ಮಕ್ಕಳು ಇರುವಾಗಲೇ ನನ್ನ ಮಗಳು ಮತ್ತು ಮಗನನ್ನು ಕರೆದುಕೊಂಡು ಬೆಂಗಳೂರಿಗೆ ಅವಕಾಶ ಅರಸಿಕೊಂಡು ಬಂದೆ. ಮಕ್ಕಳನ್ನು ಬೆಳೆಸಲು ಹೌಸ್ ಕೀಪಿಂಗ್ ಕೆಲಸ ಕೂಡ ಮಾಡಿದ್ದೆ. ನರ್ಸಿಂಗ್ ಕಾಲೇಜಿನ ಲೈಬ್ರರಿಯಲ್ಲಿ ಕೂಡ ಕೆಲಸ ಮಾಡಿದ್ದೆʼʼಎಂದು ಹೇಳಿಕೊಂಡಿದ್ದರು.

Continue Reading

ಸಿನಿಮಾ

Abdu Rozik: ಎಂಗೇಜ್‌ ಆದ ಬಿಗ್‌ ಬಾಸ್‌ ಖ್ಯಾತಿಯ ಅಬ್ದು ರೋಜಿಕ್!

Abdu Rozik: 20 ವರ್ಷದ ಅಬ್ದು ರೋಜಿಕ್ 19 ವರ್ಷದ ಯುವತಿಯನ್ನು ಮದುವೆಯಾಗಲಿದ್ದಾರೆ. ಅಭಿಮಾನಿಗಳು ಕೂಡ ಅಬ್ದು ಮದುವೆಗಾಗಿ ಕಾಯುತ್ತಿದ್ದಾರೆ. ಅಬ್ದು ಅಪಾರ ಅಭಿಮಾನಿಗಳನ್ನು ಹೊಂದಿದ್ದಾರೆ. ಬಿಗ್ ಬಾಸ್’ ನಿಂದಾಗಿ ಅಬ್ದು ಖ್ಯಾತಿ ಮತ್ತು ಜನಪ್ರಿಯತೆ ಹೆಚ್ಚಾಯಿತು. ಸಲ್ಮಾನ್ ಖಾನ್ ಅವರ ಜೊತೆಗೂ ಅಬ್ದು ಒಳ್ಳೆಯ ಬಾಂಧವ್ಯ ಹೊಂದಿದ್ದಾರೆ.

VISTARANEWS.COM


on

Abdu Rozik Bigg Boss 16 gets engaged
Koo

ಬೆಂಗಳೂರು: ಹಿಂದಿ ಬಿಗ್‌ ಬಾಸ್‌ ಸೀಸನ್‌ 16ರ (Bigg Boss 16 fame Abdu Rozik) ಖ್ಯಾತಿಯ ಅಬ್ದು ರೋಜಿಕ್ (Abdu Rozik) ತಾವು ಎಂಗೇಜ್‌ ಆಗಿರುವ ವಿಚಾರವನ್ನು ಸೋಷಿಯಲ್‌ ಮೀಡಿಯಾ ಮೂಲಕ ಹೇಳಿಕೊಂಡಿದ್ದಾರೆ. ಅಬ್ದು ರೋಜಿಕ್ ಇದೀಗ ನಿಶ್ಚಿತಾರ್ಥ ಸಮಾರಂಭದ ಕೆಲವು ಫೋಟೊಗಳನ್ನು ಶೇರ್‌ ಮಾಡಿಕೊಂಡಿದ್ದಾರೆ. ಜತೆಗೆ ಮದುವೆಯಾಗುತ್ತಿರುವ ಹುಡುಗಿ ಹೆಸರನ್ನು ರಿವೀಲ್‌ ಮಾಡಿದ್ದಾರೆ. ಕಳೆದ ನಾಲ್ಕು ತಿಂಗಳಿಂದ ಅಮೀರಾ ಅವರನ್ನು ಪ್ರೀತಿಸುತ್ತಿರುವುದಾಗಿ ಹೇಳಿಕೊಂಡಿದ್ದಾರೆ. ಮಾತ್ರವಲ್ಲ ಜುಲೈನಲ್ಲಿ ಮದುವೆಯಾಗುವುದಾಗಿ ಮಾಹಿತಿ ಹಂಚಿಕೊಂಡಿದ್ದಾರೆ. ಮದುವೆಗೆ ಸಲ್ಮಾನ್ ಖಾನ್ ಭಾಗಿಯಾಗಲಿದ್ದಾರೆ ಎಂದು ಹೇಳಿಕೆ ನೀಡಿದ್ದಾರೆ.

ಅಬ್ದು ರೋಜಿಕ್ ನಿಶ್ಚಿತಾರ್ಥದ ಸಮಾರಂಭಕ್ಕಾಗಿ ಸಾಂಪ್ರದಾಯಿಕ ಉಡುಪನ್ನು ಧರಿಸಿರುವುದನ್ನು ಕಾಣಬಹುದು. ಭಾವಿ ಪತ್ಮಿ ಅಮೀರಾ ಮುಖವು ಬುರ್ಖಾದಿಂದ ಮುಚ್ಚಲ್ಪಟ್ಟಿತ್ತು. ಅಬ್ದು ಹೃದಯ ಆಕಾರದ ಉಂಗುರವನ್ನು ಹಿಡಿದಿರುವುದು ಕಂಡುಬಂದಿದೆ. ದುಬೈ ಮಾಲ್‌ನಲ್ಲಿ ಇವರ ಭೇಟಿ ನಡೆದಿದೆ. ಮೊದಲ ಬಾರಿಗೆ ಅಬ್ದು ಅವರು ಅಮೀರಾ ಅವರನ್ನು ನೋಡಿದರು. ಮೊದಲ ನೋಟದಲ್ಲೇ ಅವರು ಸಾಕಷ್ಟು ಇಷ್ಟ ಆದರು. ಈಗ ಇವರು ಮದುವೆ ಆಗುತ್ತಿದ್ದಾರೆ.

ಅಬ್ದು ಅವರು ಅಮೀರಾ ಕುರಿತಾಗಿ ಮಾತನಾಡಿ ʻʻಅಮೀರಾ ಸುಂದರವಾದ ಉದ್ದ ಕೂದಲು ಮತ್ತು ಚೆಂದದ ಕಣ್ಣುಗಳನ್ನು ಹೊಂದಿದ್ದಾಳೆ” ಎಂದು ಹೇಳಿದರು. ಅಮೀರಾ ಶಾರ್ಜಾದಲ್ಲಿ ಬಿಸಿನೆಸ್ ಅಡ್ಮಿನಿಸ್ಟ್ರೇಷನ್ ಓದುತ್ತಿದ್ದಾರೆ ಎಂದು ಹೇಳಿಕೆ ನೀಡಿದರು. ಅಬ್ದು ಮಾತನಾಡಿ ʻʻಅಮೀರಾ ನಾನು ಕುಳ್ಳುಗಿದ್ದರೂ ನನ್ನ ಪ್ರೀತಿಯನ್ನು ಒಪ್ಪಿಕೊಂಡಿರುವುದು ಸಂತೋಷವಾಗಿದೆ. ಜುಲೈ 7 ರಂದು ಮದುವೆಯಾಗಲಿದ್ದೇವೆ. ಸಲ್ಮಾನ್ ಖಾನ್ ನಮಗೆ ಆಶೀರ್ವದಿಸಲು ಮದುವೆಗೆ ಬರುತ್ತಾರೆ. ಅಮೀರಾ ನನ್ನ ಜೀವನದಲ್ಲಿ ಬಂದಿರುವುದು ನನ್ನ ಅದೃಷ್ಟʼʼಎಂದರು.

ಇದನ್ನೂ ಓದಿ: Dolly Dhananjay:  ಡಾಲಿ ಅಭಿನಯದ ʻಕೋಟಿʼ ಸಿನಿಮಾದ ಮೊದಲ ಹಾಡು ನಾಳೆ ಬಿಡುಗಡೆ

20 ವರ್ಷದ ಅಬ್ದು ರೋಜಿಕ್ 19 ವರ್ಷದ ಯುವತಿಯನ್ನು ಮದುವೆಯಾಗಲಿದ್ದಾರೆ. ಅಭಿಮಾನಿಗಳು ಕೂಡ ಅಬ್ದು ಮದುವೆಗಾಗಿ ಕಾಯುತ್ತಿದ್ದಾರೆ. ಅಬ್ದು ಅಪಾರ ಅಭಿಮಾನಿಗಳನ್ನು ಹೊಂದಿದ್ದಾರೆ. ಬಿಗ್ ಬಾಸ್’ ನಿಂದಾಗಿ ಅಬ್ದು ಖ್ಯಾತಿ ಮತ್ತು ಜನಪ್ರಿಯತೆ ಹೆಚ್ಚಾಯಿತು. ಸಲ್ಮಾನ್ ಖಾನ್ ಅವರ ಜೊತೆಗೂ ಅಬ್ದು ಒಳ್ಳೆಯ ಬಾಂಧವ್ಯ ಹೊಂದಿದ್ದಾರೆ. ಅಬ್ದು ರೋಜಿಕ್ ತಜಕಿಸ್ತಾನದ ಸಂಗೀತಗಾರರೂ ಹೌದು.

Continue Reading

ಕಿರುತೆರೆ

Jyoti Rai: ನೋವಿನ ನಡುವೆಯೂ ಸಹಾಯ ಹಸ್ತ ಚಾಚಿದ ನಟಿ ಜ್ಯೋತಿ ರೈ; ವಿಡಿಯೊ ವೈರಲ್‌ ಮಾಡುವಂತೆ ಸವಾಲು ಹಾಕಿದ್ದೇಕೆ?

Jyoti Rai: ಸದ್ಯ ನಟಿ ಜ್ಯೋತಿ ರೈ ಅವರದ್ದು ಎನ್ನಲಾದ ನಕಲಿ ಅಶ್ಲೀಲ ವಿಡಿಯೊ ವೈರಲ್‌ ಆಗಿದೆ. ಈ ಬಗ್ಗೆ ನಟಿ ಸೈಬರ್‌ ಪೊಲೀಸರಿಗೆ ದೂರನ್ನೂ ನೀಡಿದ್ದಾರೆ. ಈ ಘಟನೆಯಿಂದ ತೀವ್ರವಾಗಿ ನೊಂದುಕೊಂಡಿರುವ ಅವರು ಇದೀಗ ನೋವಿನ ನಡುವೆಯೂ ಹಿರಿಯ ಗಾಯಕ ಮೊಗಿಲಯ್ಯ ಅವರ ಕಷ್ಟಕ್ಕೆ ಸ್ಪಂದಿಸುವ ಮೂಲಕ ಮಾದರಿಯಾಗಿದ್ದಾರೆ. ಆರ್ಥಿಕ ಸಂಕಷ್ಟದಲ್ಲಿರುವ ಮೊಗಿಲಯ್ಯ ಅವರಿಗೆ ಜ್ಯೋತಿ ರೈ ಅವರು ಅಕ್ಷಯ ತೃತೀಯದಂದು 50 ಸಾವಿರ ರೂ. ಧನ ಸಹಾಯ ಮಾಡಿದ್ದಾರೆ.

VISTARANEWS.COM


on

Jyoti Rai
Koo

ಹೈದರಾಬಾದ್‌: ಸದ್ಯ ಕಿರುತೆರೆ ನಟಿ, ಬಹುಭಾಷಾ ಕಲಾವಿದೆ, ಕನ್ನಡ ಮೂಲದ ಜ್ಯೋತಿ ರೈ (Jyoti Rai) ಕುರಿತಾದ ಸುದ್ದಿ ರಾಷ್ಟ್ರ ಮಟ್ಟದಲ್ಲಿ ಸದ್ದು ಮಾಡುತ್ತಿದೆ. ಜ್ಯೋತಿ ರೈ ಅವರದ್ದು ಎನ್ನಲಾಗುತ್ತಿರುವ ಅಶ್ಲೀಲ ವಿಡಿಯೊ ಸೋಷಿಯಲ್‌ ಮೀಡಿಯಾದಲ್ಲಿ ಹರಿದಾಡುತ್ತಿರುವುದೇ ಇದಕ್ಕೆ ಕಾರಣ. ಈ ಪ್ರಕರಣದಿಂದ ಆಘಾತಕ್ಕೊಳಗಾದ ಅವರು ತೀವ್ರ ಬೇಸರದ ನಡುವೆಯೂ ಜನಪದ ಗಾಯಕರೊಬ್ಬರಿಗೆ ನೆರವಿನ ಹಸ್ತ ಚಾಚುವ ಮೂಲಕ ಮಾದರಿಯಾಗಿದ್ದಾರೆ.

ತೆಲುಗಿನ ಜನಪ್ರಿಯ ಜನಪದ ಗಾಯಕ ಪದ್ಮಶ್ರೀ ಪ್ರಶಸ್ತಿ ವಿಜೇತ ಮೊಗಿಲಯ್ಯ (Darshanam Mogilaiah) ತೀವ್ರ ಬಡತನದಲ್ಲಿದ್ದು, ಜೀವನ ನಿರ್ವಹಣೆಗಾಗಿ ಗಾರೆ ಕೆಲಸ ಮಾಡುತ್ತಿದ್ದರು. ಅವರು ಗಾರೆ ಕೆಲಸ ಮಾಡುತ್ತಿರುವ ಚಿತ್ರಗಳು, ವಿಡಿಯೊ ವೈರಲ್ ಆಗಿತ್ತು. ಹೀಗಾಗಿ ತನ್ನ ನೋವನ್ನು ನುಂಗಿ ಜ್ಯೋತಿ ರೈ ಅವರು ಈ ಹಿರಿಯ ಕಲಾವಿದರ ನೆರವಿಗೆ ಧಾವಿಸಿದ್ದಾರೆ.

ಧನ ಸಹಾಯ

ಅಕ್ಷಯ ತೃತೀಯ ದಿನ (ಶುಕ್ರವಾರ)ದಂದು ಜ್ಯೋತಿ ರೈ ಅವರು ಮೊಗಿಲಯ್ಯ ಅವರಿಗೆ 50 ಸಾವಿರ ರೂ. ಧನ ಸಹಾಯ ನೀಡಿದ್ದಾರೆ. ಈ ಬಗ್ಗೆ ತಮ್ಮ ಸಾಮಾಜಿಕ ಜಾಲತಾಣ ಖಾತೆಯಲ್ಲಿ ಬರೆದುಕೊಂಡಿದ್ದಾರೆ. ʼʼಅಕ್ಷಯ ತೃತೀಯದ ಪುಣ್ಯ ದಿನದಂದು ಪದ್ಮಶ್ರೀ ಮೊಗಿಲಯ್ಯ ಅವರಿಗೆ ನಾನು 50 ಸಾವಿರ ರೂ.ಗಳ ಆರ್ಥಿಕ ನೆರವನ್ನು ನೀಡಿದೆ. ಮೊಗಿಲಯ್ಯ ಅಷ್ಟು ಜನಪ್ರಿಯರಾಗಿದ್ದರೂ ತಮ್ಮ ಖಾಸಗಿ ಜೀವನ ಹಾಗೂ ವೃತ್ತಿಯಲ್ಲಿ ಸಾಕಷ್ಟು ಸಮಸ್ಯೆಗಳನ್ನು ಎದುರಿಸುತ್ತಿದ್ದರು. ಅವರು ನಡೆಸಿದ ಸುದ್ದಿಗೋಷ್ಠಿಯಿಂದಾಗಿ ಅವರ ಕಷ್ಟಗಳು ನನಗೆ ತಿಳಿದು ಬಂತುʼʼ ಎಂದು ಜ್ಯೋತಿ ರೈ ಹೇಳಿದ್ದಾರೆ.

ಮುಂದುವರಿದು, ʼʼಸದ್ಯಕ್ಕೆ ನಾನು ಸಹ ಕಷ್ಟದ ದಿನಗಳನ್ನು ಕಳೆಯುತ್ತಿದ್ದೇನೆ. ಆದರೆ ಅವರ ಕಷ್ಟ ಕೇಳಿದಾಗ ನನ್ನೊಳಗೆ ಮೂಡಿದ ಬೆಳಕು, ಮೊಗಿಲಯ್ಯ ಅವರನ್ನು ಭೇಟಿಯಾಗಿ ಸಹಾಯ ಮಾಡಲು ಪ್ರೇರೇಪಿಸಿತು. ಹೀಗಾಗಿ ಅವರಿಗೆ ಸಹಾಯ ಮಾಡಿದೆ. ಅವರಿಗೆ ಇನ್ನಷ್ಟು ಸಹಾಯ ಮಾಡುವ ಆಸೆಯಿದೆ. ನನ್ನಿಂದ ಸಾಧ್ಯವಾಗಿದ್ದನ್ನು ನಾನು ಮಾಡಿದ್ದೇನೆ. ಇನ್ಯಾರಿಗಾದರೂ ಮೊಗಿಲಯ್ಯ ಅವರಿಗೆ ಸಹಾಯ ಮಾಡುವ ಇಚ್ಛೆಯಿದ್ದರೆ ಬನ್ನಿ ಎಲ್ಲರೂ ಒಟ್ಟು ಸೇರಿ ನೆರವಾಗೋಣʼʼ ಎಂದು ಕರೆ ನೀಡಿದ್ದಾರೆ.

ಸವಾಲು

ಇದರ ಜತೆಗೆ ತಮ್ಮದು ಎನ್ನಲಾದ ನಕಲಿ ವಿಡಿಯೊಗಳನ್ನು ಸೋಷಿಯಲ್‌ ಮೀಡಿಯಾದಲ್ಲಿ ಹಂಚಿಕೊಂಡ ವ್ಯಕ್ತಿಗಳಿಗೆ ಸವಾಲು ಹಾಕಿದ್ದಾರೆ. ʼʼಈ ವಿಡಿಯೊ (ಮೊಗಿಲಯ್ಯ ಅವರಿಗೆ ಆರ್ಥಿಕ ನೆರವು ನೀಡುತ್ತಿರುವ ವಿಡಿಯೊ)ವನ್ನು ವೈರಲ್‌ ಮಾಡುವ ತಾಕತ್ತು ನಿಮ್ಮಲ್ಲಿ ಇದೆಯಾ? ಇದು ನಿಜವಾದುದು. ಈ ಕೆಳಗಿನ ಸಾಲುಗಳು ಕೆಲಸ ಇಲ್ಲದವರಿಗೆ, ಬುದ್ಧಿ ಇಲ್ಲದವರಿಗಾಗಿ. ಜಗತ್ತು ನನ್ನೆಡೆಗೆ ಅಂಧಕಾರವನ್ನು ದೂಡಿದಾಗ ನನ್ನೊಳಗಿನ ನಾನು ಇನ್ನಷ್ಟು ಪ್ರಕಾಶಮಾನವಾಗಿ ಹೊಳೆಯುತ್ತೇನೆ. ನನ್ನೊಳಗಿನ ಬೆಳಕು ಉರಿಯಲು ಇಂತಹ ಕತ್ತಲೇ ಇಂಧನ. ನಿರಾಶಾವಾದದ ಬೂದಿಯಿಂದ ಸಾಧ್ಯತೆಯ ಫೀನಿಕ್ಸ್ ಏಳುತ್ತದೆ. ನಕಾರಾತ್ಮಕ ಶಕ್ತಿಯು ಮೆಟ್ಟಿಲು; ನಾನು ಅದರ ಮೇಲೆ ಹತ್ತಿ ಸಕಾರಾತ್ಮಕತೆಯ ದಿಗಂತದ ಕಡೆಗೆ ಸಾಗುತ್ತೇನೆʼʼ ಎಂದು ಜ್ಯೋತಿ ರೈ ಬರೆದುಕೊಂಡಿದ್ದಾರೆ. ಸದ್ಯ ಅವರ ಈ ಪೋಸ್ಟ್‌ ವೈರಲ್‌ ಆಗಿದೆ. ಅಭಿಮಾನಿಗಳು ಅವರ ಈ ದಿಟ್ಟತನವನ್ನು, ಮಾನವೀಯತೆಯ ಗುಣವನ್ನು ಮೆಚ್ಚಿದ್ದಾರೆ.

ಇದನ್ನೂ ಓದಿ: Jyothi Rai: ಯುಟ್ಯೂಬ್‌ ಸಬ್‌ಸ್ಕ್ರೈಬ್‌ ಮಾಡಿದ್ರೆ ಜ್ಯೋತಿ ರೈ ವಿಡಿಯೊ ಅಪ್‌ಲೋಡ್‌ ಮಾಡ್ತೀನಿ ಎಂದ ಕಿಡಿಗೇಡಿ!

ಇತ್ತೀಚೆಗೆ ಜ್ಯೋತಿ ರೈ ಅವರದ್ದು ಎನ್ನಲಾದ ಮೂರು ಅಶ್ಲೀಲ ವಿಡಿಯೊ ಹಾಗೂ ಕೆಲವು ಫೋಟೊಗಳು ವೈರಲ್ ಆಗಿದ್ದವು. ಬಳಿಕ ನಟಿ ಈ ಬಗ್ಗೆ ಸುದೀರ್ಘವಾಗಿ ಪತ್ರವನ್ನು ಬರೆದು ಸ್ಪಷ್ಟನೆ ನೀಡಿದ್ದರು. ʻʻನಾನು ಅಪರಿಚಿತ ವ್ಯಕ್ತಿಗಳಿಂದ ಕೆಲವು ಸಂದೇಶಗಳನ್ನು ಸ್ವೀಕರಿಸಿ ಆಘಾತಕ್ಕೆ ಒಳಗಾಗಿದ್ದೇನೆ. ಇಂತಹ ವ್ಯಕ್ತಿಗಳ ಬಗ್ಗೆ ಸೂಕ್ತ ಕ್ರಮವನ್ನು ತೆಗೆದುಕೊಳ್ಳಬೇಕೆಂದು ನಾನು ಮನವಿ ಮಾಡಿಕೊಳ್ಳುತ್ತೇನೆ. ನನ್ನ ಕುಟುಂಬದ ಪ್ರತಿಷ್ಠೆ ಅಪಾಯದಲ್ಲಿದೆ. ಇಂತಹ ಕಿಡಿಗೇಡಿಗಳ ವಿರುದ್ಧ ಕ್ರಮ ಕೈಗೊಳ್ಳದೆ ಇದ್ದರೆ, ಸರಿ ಮಾಡಲು ಸಾಧ್ಯವಾದಂತಹ ಡ್ಯಾಮೇಜ್ ಆಗಲಿದೆ. ನಿಮ್ಮ ತನಿಖೆಗೆ ಅನುಕೂಲವಾಗುವಂತೆ ಯೂಸರ್ ಐಡಿಗಳನ್ನು ಪೋಸ್ಟ್‌ ಮಾಡಿದ್ದೇನೆʼʼ ಎಂದು ಹೇಳಿಕೊಂಡಿದ್ದರು. ಜತೆಗೆ ಸೈಬರ್ ಕ್ರೈಂ ಪೊಲೀಸರಿಗೆ ದೂರು ಸಹ ನೀಡಿದ್ದರು.

Continue Reading

ಕಿರುತೆರೆ

Star Suvarna: ಬಹುಮಾನದ ಜತೆಗೆ ಮನೋರಂಜನೆ ಹೊತ್ತು ಬರುತ್ತಿದೆ ʼಸುವರ್ಣ ಗೃಹಮಂತ್ರಿʼ; ಯಾವಾಗ ಪ್ರಸಾರ?

Star Suvarna: ಸದಾ ಹೊಸತನದ ಧಾರಾವಾಹಿ, ಕಾರ್ಯಕ್ರಮ, ರಿಯಾಲಿಟಿ ಶೋ ನೀಡುವ ಮೂಲಕ ಗಮನ ಸೆಳೆಯುವ ಸ್ಟಾರ್‌ ಸುವರ್ಣ ಇದೀಗ ಮತ್ತೊಂದು ವಿಭಿನ್ನ ಕಾನ್ಸೆಪ್ಟ್‌ ಹೊತ್ತು ಬಂದಿದೆ. ಕರುನಾಡಿನ ಗೃಹಿಣಿಯರಿಗಾಗಿ ‘ಸುವರ್ಣ ಗೃಹಮಂತ್ರಿ’ ಎನ್ನುವ ಶೋ ಆರಂಭಿಸಲಿದೆ. ಇದೇ ಮೊದಲ ಬಾರಿಗೆ ಜನಪ್ರಿಯ ನಿರೂಪಕ ಮುರಳಿ ಸ್ಟಾರ್ ಸುವರ್ಣ ವಾಹಿನಿಗೆ ಲಗ್ಗೆಯಿಟ್ಟಿದ್ದು, ‘ಸುವರ್ಣ ಗೃಹಮಂತ್ರಿ’ ಕಾರ್ಯಕ್ರಮದ ಸಾರಥಿಯಾಗಿ ನಿರೂಪಣೆಯ ಜವಾಬ್ದಾರಿಯನ್ನು ಹೊತ್ತಿದ್ದಾರೆ. ಕರ್ನಾಟಕದ ಗೃಹಿಣಿಯರಿಗಾಗಿಯೇ ಸಿದ್ಧವಾಗಿರೋ ಈ ಕಾರ್ಯಕ್ರಮದಲ್ಲಿ ಮುರಳಿ ಅವರು ಅಣ್ಣನ ಸ್ಥಾನದಲ್ಲಿ ನಿಂತು ತವರು ಮನೆ ಉಡುಗೊರೆಯಾಗಿ ರೇಷ್ಮೆ ಸೀರೆ, ಬೆಳ್ಳಿ-ಬಂಗಾರ ನೀಡಲಿದ್ದಾರೆ. ಈ ಕಾರ್ಯಕ್ರಮ ಮೇ 13ರಿಂದ ಮಧ್ಯಾಹ್ನ 1 ಗಂಟೆಗೆ ಪ್ರಸಾರವಾಗಲಿದೆ.

VISTARANEWS.COM


on

Star Suvarna
Koo

ಬೆಂಗಳೂರು: ಕನ್ನಡಿಗರ ಅಚ್ಚು ಮೆಚ್ಚಿನ ಸ್ಟಾರ್ ಸುವರ್ಣ (Star Suvarna) ವಾಹಿನಿಯು ಇದೀಗ ವೀಕ್ಷಕರಿಗೆ ಮಧ್ಯಾಹ್ನದ ಮನರಂಜನೆಯನ್ನು ಇನ್ನಷ್ಟು ದುಪ್ಪಟ್ಟುಗೊಳಿಸಲು ‘ಸುವರ್ಣ ಗೃಹಮಂತ್ರಿ’ (Suvarna GruhaMantri) ಎಂಬ ಹೊಸದೊಂದು ರಿಯಾಲಿಟಿ ಶೋ ಅನ್ನು ಪ್ರಸಾರ ಮಾಡಲು ಸಜ್ಜಾಗಿದೆ.

ಇದೊಂದು ವಿಭಿನ್ನ ರೀತಿಯ ರಿಯಾಲಿಟಿ ಶೋ. ಸಾಮಾನ್ಯವಾಗಿ ಮನೆಯಲ್ಲಿ ಕೆಲಸ ಮಾಡುವ ಗೃಹಿಣಿಯರನ್ನು/ಹೆಣ್ಮಕ್ಕಳನ್ನು ಯಾರೂ ಗುರುತಿಸುವುದಿಲ್ಲ. ಮನೆ ಮಂದಿಯನ್ನು ಅವರು ಎಷ್ಟೇ ಚೆನ್ನಾಗಿ ನೋಡಿಕೊಂಡರೂ ‘ಥ್ಯಾಂಕ್ ಯೂ’ ಕೂಡ ಯಾರೂ ಹೇಳುವುದಿಲ್ಲ. ಅಂತಹ ಮನೆ ಬೆಳಗೋ ಗೃಹಿಣಿಯರನ್ನು ಗುರುತಿಸಿ, ಗಂಡ-ಹೆಂಡತಿಯ ಅನ್ಯೂನ್ಯತೆಯ ಬಗ್ಗೆ ತಿಳಿದು, ಅವರನ್ನು ಸನ್ಮಾನಿಸಿ, ಮಾತುಕತೆ ನಡೆಸಿ ಆಟದ ಜತೆ ರೇಷ್ಮೆ ಸೀರೆ, ಚಿನ್ನ, ಬೆಳ್ಳಿ ಹಾಗೂ ಮತ್ತಷ್ಟು ಬೆಲೆಬಾಳುವ ಬಹುಮಾನಗಳನ್ನು ನೀಡುವುದೇ ʼಸುವರ್ಣ ಗೃಹಮಂತ್ರಿʼ ಕಾರ್ಯಕ್ರಮದ ಕಾನ್ಸೆಪ್ಟ್‌.

ಇನ್ನು ಇದೇ ಮೊದಲ ಬಾರಿಗೆ ಜನಪ್ರಿಯ ನಿರೂಪಕ ಮುರಳಿ ಸ್ಟಾರ್ ಸುವರ್ಣ ವಾಹಿನಿಗೆ ಲಗ್ಗೆಯಿಟ್ಟಿದ್ದು, ‘ಸುವರ್ಣ ಗೃಹಮಂತ್ರಿ’ ಕಾರ್ಯಕ್ರಮದ ಸಾರಥಿಯಾಗಿ ನಿರೂಪಣೆಯ ಜವಾಬ್ದಾರಿಯನ್ನು ಹೊತ್ತಿದ್ದಾರೆ. ಕರ್ನಾಟಕದ ಗೃಹಿಣಿಯರಿಗಾಗಿಯೇ ಸಿದ್ಧವಾಗಿರೋ ಈ ಕಾರ್ಯಕ್ರಮದಲ್ಲಿ ಮುರಳಿ ಅವರು ಅಣ್ಣನ ಸ್ಥಾನದಲ್ಲಿ ನಿಂತು ತವರು ಮನೆ ಉಡುಗೊರೆಯಾಗಿ ರೇಷ್ಮೆ ಸೀರೆ, ಬೆಳ್ಳಿ-ಬಂಗಾರ ನೀಡಲಿದ್ದಾರೆ. ಈ ಮೂಲಕ ಮನೆ ಗೃಹಿಣಿಯನ್ನು ಹಾರೈಸಿ, ರಾಣಿ ಸೀಟಿನಲ್ಲಿ ಕೂರಿಸಿ ಗೌರವಿಸಲಿದ್ದಾರೆ. ಅಷ್ಟೇ ಅಲ್ಲದೆ ಅವರ ಮನೆಗೆ ಬಂದಿರುವ ಆಪ್ತ ಸಂಬಂಧಿಕರಿಗೆ ಹಾಗೂ ಸ್ನೇಹಿತರನ್ನೂ ಆಟವನ್ನು ಆಡಿಸಿ ಬಹುಮಾನಗಳನ್ನು ನೀಡಲಿದ್ದಾರೆ.

ಸದ್ಯ ‘ಸುವರ್ಣ ಗೃಹಮಂತ್ರಿ’ಯ ಪ್ರೋಮೋ ಸೋಷಿಯಲ್ ಮೀಡಿಯಾದಲ್ಲಿ ಸಖತ್ ಸೌಂಡ್ ಮಾಡುತ್ತಿದೆ. ವೀಕ್ಷಕರಲ್ಲಿ ಕುತೂಹಲ ಕೆರಳಿಸಿದೆ. ಈ ಕಾರ್ಯಕ್ರಮದಲ್ಲಿ ಬಹುಮಾನಗಳ ಮಹಾ ಮಳೆಯೇ ಸುರಿಯಲಿದ್ದು ಪ್ರೇಕ್ಷಕರಿಗೆ ಮನೋರಂಜನೆ ಸಿಗುವುದಂತು ಖಚಿತ.

ಯಾವಾಗ ಪ್ರಸಾರ?

ಕರುನಾಡಿನ ಗೃಹಿಣಿಯರನ್ನು ಸಂಭ್ರಮಿಸಲು ರಾಣಿ ಸೀಟಿನೊಂದಿಗೆ ನಿಮ್ಮನೆಗೆ ಬರುತ್ತಿರುವ ಹೊಸ ಶೋ ‘ಸುವರ್ಣ ಗೃಹಮಂತ್ರಿ’ ಇದೇ ಸೋಮವಾರ(ಮೇ 13)ದಿಂದ ಮಧ್ಯಾಹ್ನ 1 ಗಂಟೆಗೆ ಆರಂಭವಾಗಲಿದೆ. ಮನೋರಂಜನೆ ಜತೆಗೆ ಬಹುಮಾನ ಗೆಲ್ಲಲು ನಿಮ್ಮ ನೆಚ್ಚಿನ ಸ್ಟಾರ್ ಸುವರ್ಣ ವಾಹಿನಿಯಲ್ಲಿ ವೀಕ್ಷಿಸಿ.

ಇದನ್ನೂ ಓದಿ: Suvarna Superstar: ʻಸುವರ್ಣ ಸೂಪರ್ ಸ್ಟಾರ್‌ʼಗೆ 1000 ಸಂಚಿಕೆಗಳ ಸಂಭ್ರಮ!

Continue Reading
Advertisement
Kannada New Movie Moorane Krishnappa trailer Out
ಸ್ಯಾಂಡಲ್ ವುಡ್3 mins ago

Kannada New Movie: ಮನರಂಜನೆಯ ರಸದೌತಣ ಬಡಿಸಲು ಬಂದ ʻಮೂರನೇ ಕೃಷ್ಣಪ್ಪʼ: ಟ್ರೈಲರ್‌ ಔಟ್‌!

Vimala Raman confirms her relationship with this villan actor
ಸ್ಯಾಂಡಲ್ ವುಡ್10 mins ago

Vimala Raman: ಖಳನಟನ ಜತೆ ಪ್ರೀತಿಲಿ ಬಿದ್ದ ʻಆಪ್ತರಕ್ಷಕʼ ನಟಿ

Money Guide
ಮನಿ-ಗೈಡ್18 mins ago

Money Guide: ಎಫ್‌ಡಿ V/S ಆರ್‌ಡಿ; ಯಾವುದು ಉತ್ತಮ? ಯಾವುದರಲ್ಲಿ ಹೂಡಿಕೆ ಮಾಡಬೇಕು?

Lok Sabha Election
ದೇಶ26 mins ago

Lok Sabha Election: 10 ರಾಜ್ಯಗಳ 96 ಕ್ಷೇತ್ರಗಳಲ್ಲಿ ನಾಳೆ ಮತದಾನ; ಕಣದಲ್ಲಿರುವ ಪ್ರಮುಖರು ಯಾರು?

Neha Murder Case
ಕರ್ನಾಟಕ31 mins ago

Neha Murder Case: ನೇಹಾ ಕೊಲೆ ಪ್ರಕರಣ; ಚಾರ್ಜ್‌ಶೀಟ್ ಸಲ್ಲಿಸಲು ಸಿಐಡಿ ತಯಾರಿ

Prajwal Revanna Case Will Not Be Handed Over To CBI Says Cm Siddaramaiah
Lok Sabha Election 202453 mins ago

Prajwal Revanna Case: ಪ್ರಜ್ವಲ್‌ ಪೆನ್‌ಡ್ರೈವ್‌ ಕೇಸ್;‌ ಸಿಬಿಐಗೆ ಏಕೆ ಕೊಡಲ್ಲ ಎಂದು ಕಾರಣ ಬಿಚ್ಚಿಟ್ಟ ಸಿಎಂ ಸಿದ್ದರಾಮಯ್ಯ

Drowned in water
ಚಿಕ್ಕಬಳ್ಳಾಪುರ55 mins ago

Drowned in water : ಕೆರೆಯಲ್ಲಿ ಈಜುವ ಸವಾಲು; ಜೋಶ್‌ನಲ್ಲಿ ನೀರಿಗೆ ಇಳಿದ ಟೆಕ್ಕಿ ಮೃತ್ಯು

PoK
ಪ್ರಮುಖ ಸುದ್ದಿ58 mins ago

PoK Crisis: ಪಾಕ್‌ ಆಕ್ರಮಿತ ಕಾಶ್ಮೀರದಲ್ಲಿ ದಂಗೆಯೆದ್ದ ಜನ, ಗಲಾಟೆ; ಭಾರತದ ಜತೆ ವಿಲೀನಕ್ಕೆ ಆಗ್ರಹ!

Pig Kidney
ವಿದೇಶ1 hour ago

Pig Kidney: ಹಂದಿಯ ಮೂತ್ರಪಿಂಡ ಕಸಿ ಮಾಡಿಸಿಕೊಂಡಿದ್ದ ವ್ಯಕ್ತಿ 2 ತಿಂಗಳ ಬಳಿಕ ಸಾವು

Arvind Kejriwal
ದೇಶ3 hours ago

Arvind Kejriwal: ಚೀನಾದಿಂದ ಭಾರತದ ನೆಲ ವಾಪಸ್‌ ಸೇರಿ 10 ಗ್ಯಾರಂಟಿ ಘೋಷಿಸಿದ ಕೇಜ್ರಿವಾಲ್

Sharmitha Gowda in bikini
ಕಿರುತೆರೆ7 months ago

Geetha Serial Kannada: ನಿದ್ದೆ ಕದ್ದ ಚೋರಿ! ನಟಿ `ಭಾನುಮತಿ’ ಹಾಟ್‌ ಪೋಟೊಗಳಿಗೆ ಫ್ಯಾನ್ಸ್ ಫುಲ್ ಫಿದಾ

Kannada Serials
ಕಿರುತೆರೆ7 months ago

Kannada Serials TRP: 2ನೇ ಸ್ಥಾನದಲ್ಲಿ 2 ಧಾರಾವಾಹಿಗಳು; ಟಿಆರ್‌ಪಿ ರೇಸ್‌ನಲ್ಲಿಲ್ಲ ಭಾಗ್ಯಲಕ್ಷ್ಮೀ!

Bigg Boss- Saregamapa 20 average TRP
ಕಿರುತೆರೆ7 months ago

Kannada Serials TRP: ಏಳನೇ ಸ್ಥಾನಕ್ಕೆ ʻಅಮೃತಧಾರೆʼ ಕುಸಿತ; ಬಿಗ್‌ ಬಾಸ್‌-ಸರಿಗಮಪ ಟಿಆರ್‌ಪಿ ಎಷ್ಟು?

galipata neetu
ಕಿರುತೆರೆ5 months ago

Kanyadana Serial: ಕಿರುತೆರೆಗೆ ಮತ್ತೆ ಎಂಟ್ರಿ ಕೊಟ್ಟ ʻಗಾಳಿಪಟʼ ಖ್ಯಾತಿಯ ʻನೀತುʼ!

Kannada Serials
ಕಿರುತೆರೆ8 months ago

Kannada Serials TRP: ನಾಲ್ಕನೇ ಸ್ಥಾನಕ್ಕೆ ಕುಸಿತ ಕಂಡ ʻಸೀತಾ ರಾಮʼ; ಟಿಆರ್‌ಪಿ ರೇಸ್‌ಗೆ ʻಭಾಗ್ಯಲಕ್ಷ್ಮಿʼ ಬ್ಯಾಕ್‌!

Kannada Serials
ಕಿರುತೆರೆ7 months ago

Kannada Serials TRP: ಟಿಆರ್‌ಪಿಯಲ್ಲಿ ʻಭಾಗ್ಯಲಕ್ಷ್ಮೀʼ ಹವಾ; ʻಪುಟ್ಟಕ್ಕನ ಮಕ್ಕಳುʼ ಧಾರಾವಾಹಿಗೆ ಸಂಕಷ್ಟ!

Bigg Boss' dominates TRP; Sita Rama fell to the sixth position
ಕಿರುತೆರೆ7 months ago

Kannada Serials TRP: ಟಿಆರ್‌ಪಿಯಲ್ಲಿ ʻಬಿಗ್ ಬಾಸ್ʼದೇ ಮೇಲುಗೈ; 6ನೇ ಸ್ಥಾನಕ್ಕೆ ಕುಸಿದ ʻಸೀತಾ ರಾಮʼ

geetha serial Dhanush gowda engagement
ಕಿರುತೆರೆ5 months ago

Dhanush Gowda: ಗೀತಾ ಧಾರಾವಾಹಿ ನಟನ ನಿಶ್ಚಿತಾರ್ಥ; ಭವ್ಯಾಳ ಕಮೆಂಟ್‌ ಬಾಕ್ಸ್‌ ಆಫ್‌!

varun
ಕಿರುತೆರೆ6 months ago

Brindavana Serial: ʼಬೃಂದಾವನʼ ಧಾರಾವಾಹಿಯಲ್ಲಿ ದೊಡ್ಡ ಟ್ವಿಸ್ಟ್‌; ಪ್ರಮುಖ ಪಾತ್ರಧಾರಿಯೇ ಬದಲು

Kannada Serials
ಕಿರುತೆರೆ8 months ago

Kannada Serials TRP: ಟಿಆರ್‌ಪಿಯಲ್ಲಿ ಏರಿಕೆ ಕಂಡ ʻಅಮೃತಧಾರೆʼ; ʻಗಟ್ಟಿಮೇಳʼಕ್ಕೆ ನಾಲ್ಕನೇ ಸ್ಥಾನ!

Prajwal Revanna Case: Beware of making a statement Parameshwara warns to HD Kumaraswamy
ಕ್ರೈಂ3 hours ago

Prajwal Revanna Case: ಪ್ರಜ್ವಲ್‌ ರೇವಣ್ಣ ಕೇಸ್‌; ನಿಮ್ಮನ್ನೂ ವಿಚಾರಣೆಗೆ ಕರೆಯಬೇಕಾಗುತ್ತದೆ: ಎಚ್‌ಡಿಕೆಗೆ ಪರಮೇಶ್ವರ್‌ ವಾರ್ನಿಂಗ್‌!

Prajwal Revanna Case Two people of pen drive allottees arrested
ಕ್ರೈಂ4 hours ago

Prajwal Revanna Case: ಪ್ರಜ್ವಲ್‌ ರೇವಣ್ಣ ಅಶ್ಲೀಲ ವಿಡಿಯೊ ಕೇಸ್‌; ಇಬ್ಬರು ಪೆನ್‌ಡ್ರೈವ್‌ ಹಂಚಿಕೆದಾರರ ಅರೆಸ್ಟ್‌

Dina Bhavishya
ಭವಿಷ್ಯ12 hours ago

Dina Bhavishya: ಹತಾಶೆಯಲ್ಲಿ ಈ ತೀರ್ಮಾನ ಮಾಡಲೇಬೇಡಿ; ಈ ರಾಶಿಯವರು ಜೀವನ ಪೂರ್ತಿ ಕೊರಗಬೇಕಾಗುತ್ತೆ!

Bengaluru News
ಬೆಂಗಳೂರು1 day ago

Bengaluru News : ಕೆಎಎಸ್‌ ಅಧಿಕಾರಿ ಪತ್ನಿ ಅನುಮಾನಾಸ್ಪದ‌ ಸಾವು; ಹೈಕೋರ್ಟ್‌ ವಕೀಲೆಗೆ ಕಾಡಿದ್ದೇನು?

Dina Bhavishya
ಭವಿಷ್ಯ1 day ago

Dina Bhavishya : ಈ ದಿನ ಅತಿರೇಕದ ಮಾತುಗಳು ಅಪಾಯ ತರಬಹುದು

Physical Abuse The public prosecutor called the client woman to the lodge
ಕ್ರೈಂ2 days ago

Physical Abuse : ಲೈಂಗಿಕ ದೌರ್ಜನ್ಯ; ಕಕ್ಷಿದಾರ ಮಹಿಳೆಯನ್ನು ಮಂಚಕ್ಕೆ ಕರೆದ ಪಬ್ಲಿಕ್ ಪ್ರಾಸಿಕ್ಯೂಟರ್!

murder case kalaburagi
ಕಲಬುರಗಿ2 days ago

Murder Case : ಕಾಂಗ್ರೆಸ್‌ಗೆ ವೋಟ್‌ ಹಾಕಿದ್ದಕ್ಕೆ ಅಮಾವಾಸ್ಯೆ ದಿನ ಕರೆದು ಕೊಂದರು

Rain Effect In karnataka
ಮಳೆ2 days ago

Rain Effect : ಬಿರುಗಾಳಿ ರಭಸಕ್ಕೆ ಮನೆಯ ಗೇಟ್ ಬಿದ್ದು ಬಾಲಕಿ ಸಾವು; ಸಿಡಿಲಿಗೆ ಎತ್ತುಗಳು ಬಲಿ

Dina Bhavishya
ಭವಿಷ್ಯ2 days ago

Dina Bhavishya: ಶುಭ ಶುಕ್ರವಾರ ಈ ರಾಶಿಯವರಿಗೆ ಖುಲಾಯಿಸಲಿದೆ ಲಕ್‌

Prajwal Revanna case Revanna bail plea to be heard on Monday Advocate Nagesh argument was as follows
ಕ್ರೈಂ3 days ago

Prajwal Revanna Case: ರೇವಣ್ಣ ಜಾಮೀನು ಅರ್ಜಿ ಸೋಮವಾರಕ್ಕೆ: ಎಸ್‌ಐಟಿಗೆ ಹಿಗ್ಗಾಮುಗ್ಗಾ ತರಾಟೆ; ವಕೀಲ ನಾಗೇಶ್‌ ವಾದ ಹೀಗಿತ್ತು!

ಟ್ರೆಂಡಿಂಗ್‌