Karnataka Weather : ಇನ್ನೂ 3 ತಿಂಗಳು ಉತ್ತರ ಒಳನಾಡು ಕೊತಕೊತ; ತಜ್ಞರಿಂದ ಅಲರ್ಟ್‌ - Vistara News

ಮಳೆ

Karnataka Weather : ಇನ್ನೂ 3 ತಿಂಗಳು ಉತ್ತರ ಒಳನಾಡು ಕೊತಕೊತ; ತಜ್ಞರಿಂದ ಅಲರ್ಟ್‌

Karnataka Weather Forecast : ಈ ಬಾರಿಯ ಬಿರು ಬೇಸಿಗೆಗೆ ಜನರು ತತ್ತರಿಸಿ ಹೋಗುವುದು ಗ್ಯಾರಂಟಿ.. ಅದರಲ್ಲೂ ಉತ್ತರ ಕರ್ನಾಟಕ ಮಂದಿಗೆ ಮೇ ತಿಂಗಳ ಅಂತ್ಯದವರೆಗೆ ಸೂರ್ಯನು ಶಾಕ್‌ (Dry Weather) ಕೊಡಲಿದ್ದಾನೆ.

VISTARANEWS.COM


on

Mainly dry weather conditions likely to prevail over the State.
ಸಾಂದರ್ಭಿಕ ಚಿತ್ರ
ಮಹತ್ವದ, ಕುತೂಹಲಕರ ಸುದ್ದಿಗಾಗಿ ಫಾಲೊ ಮಾಡಿ
Koo

ಬೆಂಗಳೂರು: ಕುಂತರೂ ನಿಂತರೂ ರಾಜ್ಯದ ಜನರನ್ನು ಬೇಸಿಗೆಯು ಸುಸ್ತು ಮಾಡಲಿದೆ. ಈ ಬಾರಿ ಸಾಮಾನ್ಯಕ್ಕಿಂತ ಹೆಚ್ಚಿನ ಪ್ರಮಾಣದಲ್ಲಿ ತಾಪಮಾನ ದಾಖಲಾಗುವ ಸಾಧ್ಯತೆ ಇದೆ ಎಂದು ತಜ್ಞರು (Karnataka Weather Forecast) ಎಚ್ಚರಿಸಿದ್ದಾರೆ. ಅದರಲ್ಲೂ ಉತ್ತರ ಒಳನಾಡಲ್ಲಿ ಗರಿಷ್ಠ ಉಷ್ಣಾಂಶ (temperature rising) ಮಾರ್ಚ್‌ನಿಂದ ಮೇ ತಿಂಗಳವರೆಗೆ ಹೆಚ್ಚಾಗಿ ಇರಲಿದೆ. ಮಾರ್ಚ್‌ ತಿಂಗಳಲ್ಲೇ ಗರಿಷ್ಠ ತಾಪಮಾನವೂ 35 ಡಿ.ಸೆ ಗಡಿ ದಾಟಿದೆ.

ಸುಡುವ ಬಿಸಿಲ ನಡುವೆಯೂ ಮಾರ್ಚ್‌ ತಿಂಗಳಲ್ಲಿ ಮಳೆಯಾಗುವ ಮುನ್ಸೂಚನೆಯನ್ನು ತಜ್ಞರು ನೀಡಿದ್ದಾರೆ. ಆದರೆ ಉತ್ತರ ಒಳನಾಡಲ್ಲಿ ರಣಬಿಸಿಲು ಹೆಚ್ಚಾಗುವ ಸಾಧ್ಯತೆ ಇದೆ ಎನ್ನಲಾಗಿದೆ. ಮುಂದಿನ 48 ಗಂಟೆಯಲ್ಲಿ ರಾಜ್ಯದಲ್ಲಿ ಒಣ ಹವೆ ಮುಂದುವರಿಯಲಿದೆ.

ತಾಪಮಾನದ ಮುನ್ಸೂಚನೆ

ಉತ್ತರ ಒಳನಾಡಿನ ಪ್ರತ್ಯೇಕ ಸ್ಥಳಗಳಲ್ಲಿ ಗರಿಷ್ಠ ತಾಪಮಾನವು ಸಾಮಾನ್ಯಕ್ಕಿಂತ 2 ಡಿಗ್ರಿ ಸೆಲ್ಸಿಯಸ್ ಹೆಚ್ಚಾಗುವ ಸಾಧ್ಯತೆಯಿದೆ. ಕರ್ನಾಟಕದ ದಕ್ಷಿಣ ಒಳನಾಡಿನ ಪ್ರತ್ಯೇಕ ಸ್ಥಳಗಳಲ್ಲಿ ಗರಿಷ್ಠ ತಾಪಮಾನವು ಸಾಮಾನ್ಯಕ್ಕಿಂತ 2 ಡಿಗ್ರಿ ಸೆಲ್ಸಿಯಸ್ ಹೆಚ್ಚಾಗುವ ಸಾಧ್ಯತೆಯಿದೆ.

ಇದನ್ನೂ ಓದಿ: Monkey Death : ಕರುಳು ಹಿಂಡುವ ದೃಶ್ಯ; ಅಪಘಾತದಲ್ಲಿ ಮೃತಪಟ್ಟ ಮರಿ ಕೋತಿಯನ್ನು ತಬ್ಬಿ ಅಮ್ಮನ ರೋದನೆ

ಬೆಂಗಳೂರಲ್ಲಿ ತಲುಪಿದ ಗರಿಷ್ಠ ಉಷ್ಣಾಂಶ

ಈ ಹಿಂದಿನ ದಾಖಲೆಗಳ ಪ್ರಕಾರ 2005ರ ಫೆಬ್ರವರಿಯಲ್ಲಿ ಬೆಂಗಳೂರಲ್ಲಿ ಗರಿಷ್ಠ ತಾಪಮಾನ 35.9 ಡಿಗ್ರಿ ಸೆಲ್ಸಿಯಸ್ ದಾಖಲಾಗಿತ್ತು. ಆ ನಂತರ 2016, 2017, 2018 ಮತ್ತು 2019ರ ಫೆಬ್ರವರಿಯಲ್ಲಿ ಗರಿಷ್ಠ ತಾಪಮಾನ 35.5 ಡಿಗ್ರಿ ಸೆಲ್ಸಿಯಸ್ ದಾಖಲಾಗಿತ್ತು. ಆದರೆ ಈ ವರ್ಷ ಫೆಬ್ರವರಿಯಲ್ಲಿ 34.5 ಡಿಗ್ರಿ ಸೆಲ್ಸಿಯಸ್ ದಾಖಲಾಗಿದೆ. ಕಳೆದ ಮಾ.5ರ ಮಂಗಳವಾರ ಬೆಂಗಳೂರಿನಲ್ಲಿ 36 ಡಿಗ್ರಿ ಸೆಲ್ಸಿಯಸ್ ದಾಖಲಾಗಿತ್ತು. ಇದು ಈ ವರ್ಷದ ಅತ್ಯಂತ ಹೆಚ್ಚು ತಾಪಮಾನದ ದಿನವಾಗಿದೆ. ಮಾರ್ಚ್ 2017ರಲ್ಲಿ, ಆ ತಿಂಗಳ ನಾಲ್ಕನೇ ವಾರದಲ್ಲಿ 37.2 ಡಿಗ್ರಿ ಸೆಲ್ಸಿಯಸ್ ಗರಿಷ್ಠ ತಾಪಮಾನ ದಾಖಲಾಗಿತ್ತು. 2019ರಲ್ಲಿ, ಮಾರ್ಚ್ 8ರಂದು 37.0 ಡಿಗ್ರಿ ಸೆಲ್ಸಿಯಸ್ ಗರಿಷ್ಠ ತಾಪಮಾನ ದಾಖಲಾಗಿತ್ತು.

ಇನ್ನೂ ರಾಜಧಾನಿ ಬೆಂಗಳೂರಲ್ಲಿ ಬಿಸಿಲ ಧಗೆ ಹೆಚ್ಚಾಗಿದೆ. ಗರಿಷ್ಠ ಉಷ್ಣಾಂಶ 35 ಡಿ.ಸೆಯಷ್ಟು ಹೆಚ್ಚಾಗಿದೆ. ಮುಂದಿನ 24 ಗಂಟೆಯಲ್ಲಿ ಬೆಂಗಳೂರು ನಗರದಲ್ಲಿ ಮುಖ್ಯವಾಗಿ ನಿರ್ಮಲ ಆಕಾಶವಿರುತ್ತದೆ. ಗರಿಷ್ಠ ಉಷ್ಣಾಂಶ 35 ಮತ್ತು ಕನಿಷ್ಠ ಉಷ್ಣಾಂಶ 20 ಡಿಗ್ರಿ ಸೆಲ್ಸಿಯಸ್ ಇರಲಿದೆ.

‌ಕಲಬುರಗಿಯಲ್ಲಿ ತಾಪ ಹೆಚ್ಚಳ

ಇನ್ನೂ ರಾಜ್ಯಾದ್ಯಾಂತ ಬುಧವಾರದಂದು ಒಣ ಹವೆ ಇತ್ತು. ಅತೀ ಗರಿಷ್ಠ ಉಷ್ಣಾಂಶ 38.8 ಡಿ.ಸೆ ಕಲಬುರಗಿಯಲ್ಲಿ ದಾಖಲಾಗಿತ್ತು. ಕನಿಷ್ಠ ಉಷ್ಣಾಂಶ 15.7 ಡಿ.ಸೆ. ಬೆಳಗಾವಿ ವಿಮಾನ ನಿಲ್ದಾಣದಲ್ಲಿ ದಾಖಲಾಗಿತ್ತು. ಕೋಲಾರದಲ್ಲಿ ಕನಿಷ್ಠ ಉಷ್ಣಾಂಶ 16.1 ಡಿಗ್ರಿ ಸೆಲ್ಸಿಯಸ್ ದಾಖಲಾಗಿದೆ. ರಾಯಚೂರು ಜಿಲ್ಲೆಯಲ್ಲಿ ಸರಾಸರಿ ಗರಿಷ್ಠ ಉಷ್ಣಾಂಶ 40.4 ಡಿಗ್ರಿ ಸೆಲ್ಸಿಯಸ್ ದಾಖಲಾಗಿದೆ.

Mainly dry weather conditions likely to prevail over the State

ಹಾವೇರಿ, ಕಲಬುರಗಿ ಮತ್ತು ರಾಯಚೂರು ಜಿಲ್ಲೆಗಳ ಕೆಲವು ಭಾಗಗಳಲ್ಲಿ ಗರಿಷ್ಠ ತಾಪಮಾನ 40 ಡಿಗ್ರಿ ಸೆಲ್ಸಿಯಸ್ ನಿಂದ 42 ಡಿಗ್ರಿ ಸೆಲ್ಸಿಯಸ್ ವ್ಯಾಪ್ತಿಯಲ್ಲಿ ದಾಖಲಾಗಿದೆ. ಇನ್ನೂ ಚಿಕ್ಕಬಳ್ಳಾಪುರ ಮತ್ತು ಚಿಕ್ಕಮಗಳೂರು , ಬೆಳಗಾವಿ, ಕೋಲಾರ, ಹಾಸನ, ಬೆಂಗಳೂರು ಗ್ರಾಮಾಂತರ ಜಿಲ್ಲೆಗಳಲ್ಲಿ ಕನಿಷ್ಠ ಉಷ್ಣಾಂಶ 13 ಡಿಗ್ರಿ ಸೆಲ್ಸಿಯಸ್ ನಿಂದ 16 ಡಿಗ್ರಿ ಸೆಲ್ಸಿಯಸ್ ಇತ್ತು.

ಈ ಸಂಗತಿಯ ಕುರಿತು ನಿಮ್ಮ ಅನಿಸಿಕೆ ಏನು? ಕಾಮೆಂಟ್ ಮೂಲಕ ತಿಳಿಸಿ

ಕ್ಷಣ ಕ್ಷಣದ ಮಾಹಿತಿಗಾಗಿ Vistara News FaceBook ಪೇಜ್ ಫಾಲೋ ಮಾಡಿ
ಮಹತ್ವದ ಮಾಹಿತಿಗಾಗಿ ವಿಸ್ತಾರ ನ್ಯೂಸ್ ಆ್ಯಪ್ ಉಚಿತವಾಗಿ ಡೌನ್ ಲೋಡ್ ಮಾಡಿಕೊಳ್ಳಿ: Andriod App | IOS App
Continue Reading
Click to comment

Leave a Reply

Your email address will not be published. Required fields are marked *

ಮಳೆ

Karnataka Rain : ಬಂಗಾಳ ಕೊಲ್ಲಿಯಲ್ಲಿ ವಾಯುಭಾರ ಕುಸಿತ; ಸಮುದ್ರಕ್ಕಿಳಿಯದಂತೆ ಮೀನುಗಾರರಿಗೆ ಎಚ್ಚರಿಕೆ

Karnataka Rain : ರಾಜ್ಯದಲ್ಲಿ ಮಳೆ ಅವಾಂತರ ಮುಂದುವರಿದಿದೆ. ಬಂಗಾಳ ಕೊಲ್ಲಿಯಲ್ಲಿ ವಾಯುಭಾರ ಕುಸಿತ ಉಂಟಾಗಿದ್ದು, ಸಮುದ್ರಕ್ಕಿಳಿಯದಂತೆ ಮೀನುಗಾರರಿಗೆ ಎಚ್ಚರಿಕೆಯನ್ನು ನೀಡಲಾಗಿದೆ.

VISTARANEWS.COM


on

By

Karnataka Rain
ಭಾರಿ ಮಳೆಗೆ ಕೊಚ್ಚಿ ಹೋದ ಬೆಳೆಗಳು
Koo

ಮಂಗಳೂರು: ಬಂಗಾಳ ಕೊಲ್ಲಿಯಲ್ಲಿ ವಾಯುಭಾರ ಕುಸಿತ ಉಂಟಾಗಿದ್ದು, ದಕ್ಷಿಣ ಕನ್ನಡ ಜಿಲ್ಲೆಯ ಸಮುದ್ರ ತೀರದಲ್ಲಿ ಹೈ ಅಲರ್ಟ್ ಘೋಷಣೆ ಮಾಡಲಾಗಿದೆ. ಸಮುದ್ರಕ್ಕಿಳಿಯದಂತೆ ಮಂಗಳೂರಿನ ಮೀನುಗಾರರಿಗೆ ಎಚ್ಚರಿಕೆ ನೀಡಲಾಗಿದೆ. ದಕ್ಷಿಣ ಕನ್ನಡದಲ್ಲಿ 115 .5 ಮಿಮಿ ನಿಂದ 204 .5 ಮಿಮಿ ಮಳೆಯಾಗುವ (Karnataka Rain) ಸಾಧ್ಯತೆ ಇದ್ದು, ಎರಡು ದಿನಕ್ಕೆ ಆರೆಂಜ್ ಅಲರ್ಟ್ ನೀಡಲಾಗಿದೆ.

ಕರಾವಳಿಯುದ್ದಕ್ಕೂ ಬಿರುಗಾಳಿ ಬೀಸುವ ಸಾಧ್ಯತೆ ಇದೆ. ಹೀಗಾಗಿ ಮೀನುಗಾರಿಕೆಗೆ ತೆರಳದಂತೆ ದಕ್ಷಿಣ ಕನ್ನಡ ಜಿಲ್ಲಾಡಳಿತ ಎಚ್ಚರಿಕೆ ನೀಡಿದೆ. ಈಗಾಗಲೇ ಸಮುದ್ರಕ್ಕೆ ತೆರಳಿದ ಮೀನುಗಾರಿಕಾ ಬೋಟ್‌ಗಳಿಗೆ ತಕ್ಷಣ ದಡಕ್ಕೆ ಬರುವಂತೆ ಸೂಚನೆಯನ್ನು ನೀಡಲಾಗಿದೆ. ಗಂಟೆಗೆ 45 ಕಿ.ಮೀ ನಿಂದ 55 ಕಿ.ಮೀ ವೇಗದಲ್ಲಿ ಗಾಳಿ ಬೀಸುವ ಸಾಧ್ಯತೆ ಇದೆ.

ದಾವಣಗೆರೆಯಲ್ಲಿ ನಿಯಂತ್ರಣ ತಪ್ಪಿ ಕೊಚ್ಚಿಹೋದ ಕಾರು

ದಾವಣಗೆರೆ ಜಿಲ್ಲೆಯ ಜಗಳೂರಿನಲ್ಲಿ ಭರ್ಜರಿ ಮಳೆಯಾಗುತ್ತಿದೆ. ಭಾನುವಾರ ರಾತ್ರಿ ಸುರಿದ ಮಳೆಯಿಂದಾಗಿ ಜಗಳೂರಿನ ಕಾನನಕಟ್ಟೆ ಗ್ರಾಮದ ಸೇತುವೆ ಮೇಲೆ ನೀರು ಹರಿದಿದೆ. ಹರಿಯುತ್ತಿರುವ ನೀರಿನಲ್ಲೇ ಕಾರು ಚಲಾಯಿಸುವಾಗ ಚಾಲಕ‌ನ ನಿಯಂತ್ರಣ ತಪ್ಪಿ ಕಾರು ಕೊಚ್ಚಿಹೋಗಿದೆ. ಕೂಡಲೇ ಸ್ಥಳೀಯರಿಂದ ಕಾರು ಚಾಲಕ ಹಾಗೂ ಪ್ರಯಾಣಿಕರನ್ನು ರಕ್ಷಣೆ ಮಾಡಲಾಗಿದೆ. ಜತೆಗೆ ಕೊಚ್ಚಿ ಹೋದ ಕಾರನ್ನು ದಡಕ್ಕೆ ಎಳೆದು ತಂದಿದ್ದಾರೆ. ಜಗಳೂರಿನ ದೊಡ್ಡ ಬೊಮ್ಮನಹಳ್ಳಿ, ಸೇರಿದಂತೆ ಹಲವು ಕಡೆ ಚೆಕ್ ಡ್ಯಾಂಗಳು ತುಂಬಿ ಹರಿಯುತ್ತಿವೆ.

karnataka rain

ಶಿವಮೊಗ್ಗದಲ್ಲಿ ಮನೆ ಮೇಲೆ ಬಿದ್ದ ಅರಳಿ ಮರ

ಶಿವಮೊಗ್ಗ ಜಿಲ್ಲೆಯಲ್ಲಿ ಮಳೆಯ ಆರ್ಭಟ ಮುಂದುವರಿದಿದ್ದು, ಸಾಕಷ್ಟು ಅವಾಂತರ ಸೃಷ್ಟಿಯಾಗಿದೆ. ಶಿವಮೊಗ್ಗದ ಸೊರಬ ಪಟ್ಟಣದಲ್ಲಿ ಮನೆ ಮೇಲೆ ಬೃಹತ್ ಅರಳಿ ಮರ, ತೆಂಗಿನ ಮರ ಬಿದ್ದು ಹಾನಿಯಾಗಿದೆ. ಭಾಗ್ಯ ಎಂಬುವರಿಗೆ ಸೇರಿದ ಮನೆ ಸಂಪೂರ್ಣ ದ್ವಂಸವಾಗಿದ್ದು,ಭಾಗ್ಯ ಅವರು ಗಾಯಗೊಂಡಿದ್ದು, ಸ್ಥಳೀಯ ಆಸ್ಪತ್ರೆಗೆ ದಾಖಲು ಮಾಡಲಾಗಿದೆ. ಮನೆ ಮೇಲೆ ಬೃಹತ್ ಮರ ಬಿದ್ದ ಪರಿಣಾಮ ಮನೆಯಲ್ಲಿದ್ದ ಗೃಹಪಯೋಗಿ ವಸ್ತುಗಳು ಹಾನಿಯಾಗಿವೆ. ಸ್ಥಳಕ್ಕೆ ತಹಸೀಲ್ದಾರ್ ಭೇಟಿ ನೀಡಿ ಪರಿಶೀಲನೆ ನಡೆಸಿದ್ದು, ಸೂಕ್ತ ಪರಿಹಾರ ನೀಡುವಂತೆ ಮನೆ ಮಾಲೀಕರು ಮನವಿ ಮಾಡಿದ್ದಾರೆ.

ಇದನ್ನೂ ಓದಿ: Rain news: ಚಾರ್ಮಾಡಿ ಘಾಟಿಯಲ್ಲಿ ಮಳೆಗೆ ಸಿಲುಕಿಕೊಂಡ ನೂರಾರು ಪ್ರಯಾಣಿಕರು

ಕೋಲಾರದಲ್ಲಿ ಮಳೆಗೆ ಬೆಳೆಗಳು ನೀರುಪಾಲು

ಕೋಲಾರದಲ್ಲಿ ಧಾರಾಕಾರ ಮಳೆಯಾಗುತ್ತಿದ್ದು, ಮಲ್ಲಸಂದ್ರ ಗ್ರಾಮದಲ್ಲಿ ಬೆಳೆಗಳು ನೀರುಪಾಲಾಗಿದೆ. ಕೋಲಾರ ತಾಲೂಕಿನ ನರಸಾಪುರ ಹೋಬಳಿಯ ಮಲ್ಲಸಂದ್ರ ಗ್ರಾಮದಲ್ಲಿ ನಿನ್ನೆ ಭಾನುವಾರ ಸಂಜೆ ಸುರಿದ ಮಳೆಗೆ ಬೆಳೆಗಳು ಜಲಾವೃತಗೊಂಡಿದೆ. ಮಳೆಯ ನೀರಿನಲ್ಲಿ ಸೌತೆಕಾಯಿ, ಬೀನ್ಸ್, ಹೂ ಬೆಳೆಗಳು ಕೊಚ್ಚಿಹೋಗಿವೆ. ಅವೈಜ್ಞಾನಿಕ ಲೇಔಟ್ ನಿರ್ಮಾಣ ಮಾಡಿರುವುದೇ ಇದಕ್ಕೆಲ್ಲ ಕಾರಣ ಎಂದು ರೈತರು ಆರೋಪಿಸಿದ್ದಾರೆ. ದೊಂಬರಹಳ್ಳಿ ಗ್ರಾಮದ ವ್ಯಾಪ್ತಿಯಲ್ಲಿರುವ ಲೇಔಟ್‌ನಲ್ಲಿ ಮಳೆಯ ನೀರು ಹರಿಯಲು ಯಾವುದೇ ಕಾಲುವೆ ಮಾಡಿಲ್ಲ. ಇದರಿಂದ ಮಳೆ ಬಿದ್ದಾಗಲೆಲ್ಲಾ ಲೇಔಟ್‌ನಿಂದ ಹರಿದು ಬರುವ ನೀರು ತೋಟಗಳಿಗೆ ನುಗ್ಗುತ್ತಿದೆ ಎಂದು ಕಿಡಿಕಾರಿದ್ದಾರೆ.

ಚಿಕ್ಕಮಗಳೂರಿನ ಮಳೆ ಅಬ್ಬರಕ್ಕೆ ಕುಸಿದ ಮನೆ

ಚಿಕ್ಕಮಗಳೂರಿನಲ್ಲಿ ಭಾನುವಾರ ರಾತ್ರಿ ಸುರಿದ ಗಾಳಿ-ಮಳೆಗೆ ಮನೆ ಕುಸಿದಿದೆ. ಎನ್.ಆರ್.ಪುರ ತಾಲೂಕಿನ ಕರ್ಕೇಶ್ವರ ಗ್ರಾಮದಲ್ಲಿ ಘಟನೆ ನಡೆದಿದೆ. ಗುಲಾಬಿ ಎಂಬಾಕೆಯ ಮನೆ ಕುಸಿದಿದೆ. ಒಂಟಿ ಮಹಿಳೆಯಾಗಿರುವ ಗುಲಾಬಿ, ಕಾಫಿ ತೋಟದಲ್ಲಿ ಕೆಲಸ ಮಾಡುತ್ತಿದ್ದು, ಗಾಳಿ-ಮಳೆಗೆ ಇದ್ದವೊಂದು ಮನೆಯೂ ನೆಲಸಮವಾಗಿದೆ ಎಂದು ಕಂಗಲಾಗಿದ್ದಾರೆ. ಸ್ಥಳಕ್ಕೆ ಅಧಿಕಾರಿಗಳು ಭೇಟಿ ನೀಡಿ ಪರಿಶೀಲನೆ ನಡೆಸಿದ್ದು, ಸ್ಥಳೀಯರಿಂದ ನಿರ್ಗತಿಕ ಮಹಿಳೆಗೆ ಸಹಾಯ ಮಾಡಿದ್ದಾರೆ.

ಈ ಸಂಗತಿಯ ಕುರಿತು ನಿಮ್ಮ ಅನಿಸಿಕೆ ಏನು? ಕಾಮೆಂಟ್ ಮೂಲಕ ತಿಳಿಸಿ

Continue Reading

ಮಳೆ

Rain news: ಚಾರ್ಮಾಡಿ ಘಾಟಿಯಲ್ಲಿ ಮಳೆಗೆ ಸಿಲುಕಿಕೊಂಡ ನೂರಾರು ಪ್ರಯಾಣಿಕರು

Rain news: ಚಿಕ್ಕಮಗಳೂರು ಜಿಲ್ಲೆಯ ಚಾರ್ಮಾಡಿ ಘಾಟಿಯಲ್ಲಿ ನೂರಾರು ಪ್ರಯಾಣಿಕರು ಮಳೆಗೆ ಸಿಕ್ಕಿಹಾಕಿಕೊಂಡರು. ತುಮಕೂರು ಮುಂತಾದ ಕಡೆ ಮಳೆ ಹಾವಳಿ ಎಬ್ಬಿಸಿದೆ.

VISTARANEWS.COM


on

rain news charamadi ghat traffic jam
Koo

ಚಿಕ್ಕಮಗಳೂರು: ಚಿಕ್ಕಮಗಳೂರು- ಮಂಗಳೂರು ಸಂಪರ್ಕ ಕಲ್ಪಿಸುವ ಚಾರ್ಮಾಡಿ ಘಾಟಿ (Charmadi Ghat) ಹೆದ್ದಾರಿಯಲ್ಲಿ (Highway) ಮಳೆಯ ಪರಿಣಾಮ ಹಾಗೂ ಕೆಎಸ್‌ಆರ್‌ಟಿಸಿ ಬಸ್‌ (KSRTC Bus) ಹಾಳಾಗಿ ನಿಂತುದರಿಂದ ನೂರಾರು ಪ್ರಯಾಣಿಕರು ಮಳೆಯಲ್ಲಿ (Rain news) ಸಿಲುಕಿಕೊಂಡು ಪಾಡು ಪಟ್ಟಿದ್ದಾರೆ. ನಿನ್ನೆ ಸಂಜೆಯಿಂದ ಸುರಿಯುತ್ತಿರುವ ಭಾರಿ ಮಳೆಗೆ ದಾರಿ ಕಾಣದೆ ವಾಹನ ಸವಾರರು ರಸ್ತೆ ಬದಿಯಲ್ಲಿ ವಾಹನ ನಿಲ್ಲಿಸಿದುದರಿಂದ ಟ್ರಾಫಿಕ್‌ ಜಾಮ್‌ (Traffic jam) ಉಂಟಾಯಿತು. ಜೊತೆಗೆ ಎರಡು ಕೆಎಸ್‌ಆರ್‌ಟಿಸಿ ಬಸ್ಸುಗಳು ಕೆಟ್ಟು ನಿಂತ ಪರಿಣಾಮ, ವಾಹನಗಳು ಅತ್ತಿತ್ತ ಹೋಗಲಾಗದೆ ಪ್ರಯಾಣಿಕರು ಬವಣೆ ಅನುಭವಿಸಿದರು.

ಚಾರ್ಮಾಡಿ ಘಾಟಿನ ಅಣ್ಣಪ್ಪ ಸ್ವಾಮಿ ದೇವಾಲಯದ ಬಳಿ ಮಳೆಯ ನಡುವೆ KSRTC ಬಸ್ಸುಗಳೆರಡು ಕೆಟ್ಟು ರಸ್ತೆ ಮಧ್ಯದಲ್ಲಿ ನಿಂತವು. ಬಸ್ಸುಗಳು ಕೆಟ್ಟು ನಿಂತ ಪರಿಣಾಮ ಕಿಲೋಮೀಟರ್‌ಗಳಷ್ಟು ದೂರ ಟ್ರಾಫಿಕ್ ಜಾಮ್ ಉಂಟಾಯಿತು. ಹೀಗಾಗಿ ಬೆಳಗಿನ ಜಾವದಿಂದ ನೂರಾರು ವಾಹನಗಳು ನಿಂತಲ್ಲೇ ನಿಂತವು. ನಿರಂತರ ಮಳೆಯಲ್ಲಿ ಪ್ರಯಾಣಿಕರು ಬಾಕಿಯಾದರು. ಮಂಗಳೂರಿಗೆ ರೋಗಿಯನ್ನು ಒಯ್ಯುತ್ತಿದ್ದ ಒಂದು ಆಂಬ್ಯುಲೆನ್ಸ್ ಟ್ರಾಫಿಕ್ ನಡುವೆ ಸಿಲುಕಿಕೊಂಡಿತು. ಟ್ರಾಫಿಕ್ ಕ್ಲಿಯರ್ ಮಾಡಲು ಬಣಕಲ್, ಮೂಡಿಗೆರೆ ಪೊಲೀಸರು ಹರಸಾಹಸಪಟ್ಟರು.

ಚಿಕ್ಕಮಗಳೂರು ಜಿಲ್ಲೆಯ ಹಲವಡೆ ಮಳೆಯ ಆರ್ಭಟ ಮುಂದುವರಿದಿದೆ. ಚಿಕ್ಕಮಗಳೂರು, ಕೊಪ್ಪ, ಕಡೂರು, ಕಳಸಾಪುರ, ಪಂಚನಹಳ್ಳಿ, ಬೀರೂರು, ಶಿವನಿ, ಬೆಳವಾಡಿ, ಮೂಡಿಗೆರೆ, ಹಿರೇನಲ್ಲೂರು, ಚಿಕ್ಕನಲ್ಲೂರು, ಭಾಗದಲ್ಲಿ ಭಾರಿ ಮಳೆಯಾಗಿದ್ದು, ಜಿಲ್ಲೆಯ ಗ್ರಾಮಾಂತರ ಭಾಗದಲ್ಲಿ ವಿದ್ಯುತ್ ಸ್ಥಗಿತವಾಗಿದೆ.

ಚಿಕ್ಕಮಗಳೂರು ತಾಲೂಕಿನ ಈಶ್ವರಹಳ್ಳಿ ಗ್ರಾಮದಲ್ಲಿ ರೈತ ಬಸವರಾಜು ಎಂಬವರಿಗೆ ಸೇರಿದ 4 ಎಕರೆ ಬಾಳೆ ತೋಟ ಭಾರಿ ಗಾಳಿ ಮಳೆಗೆ ನೆಲಕಚ್ಚಿದೆ. ಕೇವಲ ಇನ್ನೊಂದು ತಿಂಗಳಲ್ಲಿ ಕಟಾವಿಗೆ ಬರಬೇಕಿದ್ದ ಬೆಳೆ ನಾಶವಾಗಿದ್ದು, ಲಕ್ಷಾಂತರ ರೂಪಾಯಿ ಬೆಳೆ ನಷ್ಟವಾಗಿ ರೈತ ಕಂಗಾಲಾಗಿದ್ದಾರೆ

ಚಿಕ್ಕಮಗಳೂರಿನ ಬಯಲು ಸೀಮೆ ಭಾಗದಲ್ಲಿ ಮಳೆ ಅಬ್ಬರ ಮುಂದುವರಿದಿದ್ದು, ಭಾರಿ ಮಳೆಗೆ ಹಳ್ಳ ಕೊಳ್ಳಗಳು ತುಂಬಿ ಹರಿದಿವೆ. ರಾತ್ರಿಯಿಡೀ ಸುರಿದ ಮಳೆಗೆ ಹೊಂಗೆ ಹಳ್ಳ ಉಕ್ಕಿ ಹರಿಯುತ್ತಿದ್ದು, ಅಜ್ಜಂಪುರ ತಾಲೂಕಿನ ಐತಿಹಾಸಿಕ ಶಿವನಿ ಕೆರೆಗೆ ಭಾರಿ ಪ್ರಮಾಣದ ನೀರು ಬಂದಿದೆ. ಹೊಂಗೆ ಹಳ್ಳದ ಸುತ್ತಮುತ್ತಲಿನ ಕೆಲವು ತೋಟಗಳು ಜಲಾವೃತವಾಗಿವೆ. ಸೇತುವೆ ರಸ್ತೆಯ ಮೇಲೆ ಹಳ್ಳದ ನೀರು ಹರಿಯಿತು.

ದೇವಾಲಯದ ಶಿಖರಕ್ಕೆ ಸಿಡಿಲು

ಯಾದಗಿರಿ: ಜಿಲ್ಲೆಯ ದೋರನಹಳ್ಳಿ ಗ್ರಾಮದ ಶ್ರೀ ಪರಮಾನಂದೇಶ್ವರ ದೇವಸ್ಥಾನದ ಶಿಖರಕ್ಕೆ ಸಿಡಿಲು ಅಪ್ಪಳಿಸಿದ್ದು, ಮೇಲ್ಭಾಗದಿಂದ ಕೆಳಭಾಗದವರಗೆ ಹಾನಿಯಾಗಿದೆ. ದೇವಸ್ಥಾನದಲ್ಲಿ ಮಲಗಿದ್ದ ವೃದ್ಧೆ ಅಪಾಯದಿಂದ ಪಾರಾಗಿದ್ದಾರೆ.

ತುಮಕೂರು: ತುಮಕೂರು ‌ಜಿಲ್ಲೆಯಲ್ಲಿ‌ ತಡರಾತ್ರಿ ಮಳೆ ಅಬ್ಬರಕ್ಕೆ ಹೆಚ್ ಬೈರಾಪುರ ಗ್ರಾಮದ ಎರಡು ಸೇತುವೆಗಳು ಸಂಪೂರ್ಣ ಜಲಾವೃತವಾಗಿವೆ. ತುಮಕೂರು ಜಿಲ್ಲೆಯ ತಿಪಟೂರು ತಾಲೂಕಿನ ಹೆಚ್ ಬೈರಾಪುರ ಗ್ರಾಮದ ಸೇತುವೆಗಳ ಮೇಲೆ ನೀರು ಹರಿಯುತ್ತಿದ್ದು, ವಾಹನ ಸವಾರರು ಪರದಾಡಿದರು.

rain news tumkur

ತುಮಕೂರು ಜಿಲ್ಲೆಯ ಶಿರಾ ನಗರದ 18ನೇ ವಾರ್ಡ್‌ನ ಕೆಲ ಮನೆ ಹಾಗೂ ವಾಣಿಜ್ಯ ಮಳಿಗೆಗಳಿಗೆ ನೀರು ನುಗ್ಗಿದೆ. ವಾಣಿಜ್ಯ ಮಳಿಗೆ ಹಾಗೂ ಮನೆಗಳಿಗೆ ನೀರು ನುಗ್ಗಿದ್ದು, ಮನೆಯೊಳಗಿದ್ದ ಅಪಾರ ಪ್ರಮಾಣದ ಧವಸ ಧಾನ್ಯ, ಪೀಠೋಪಕರಣಗಳು ನೀರು ಪಾಲಾಗಿವೆ. ಶಿರಾ ನಗರಸಭೆ ಅಧಿಕಾರಿಗಳ ಹಾಗೂ ಜನಪ್ರತಿನಿಧಿಗಳ ವಿರುದ್ಧ 18ನೇ ವಾರ್ಡ್ ಜನ ಆಕ್ರೋಶಿಸಿದ್ದಾರೆ.

ಮಗುಚಿದ ಬೋಟ್‌, ಪ್ರಯಾಣಿಕರ ರಕ್ಷಣೆ

ಕಾರವಾರ: ಉತ್ತರಕನ್ನಡ ಜಿಲ್ಲೆಯ ಕುಮಟಾ ತಾಲೂಕಿನ ತದಡಿ ಗ್ರಾಮದ ಸಮೀಪ ಪ್ರವಾಸಿ ಬೋಟ್ ಪಲ್ಟಿಯಾಗಿದ್ದು, ಸಮುದ್ರದ ಹಿನ್ನೀರಿನಲ್ಲಿ ಮಗುಚಿದ ಪ್ರವಾಸಿಗರ ಬೋಟ್‌ನಿಂದ 40 ಪ್ರವಾಸಿಗರನ್ನು ರಕ್ಷಣೆ ಮಾಡಲಾಯಿತು.

Tourist boat capsizes

ಅಳಿವೆ ಸಂಗಮ ಸ್ಥಳದಿಂದ ತುಸು ದೂರದಲ್ಲಿ ಘಟನೆ ನಡೆದಿದ್ದು, ಕರಾವಳಿ ಕಾವಲು ಪಡೆ ಮತ್ತು ಸ್ಥಳೀಯ ರಕ್ಷಣಾ ತಂಡದಿಂದ ರಕ್ಷಣಾ ಕಾರ್ಯಾಚರಣೆ ನಡೆಯಿತು. ಮೂಡಂಗಿಯ ಗಣೇಶ, ರಮೇಶ ಎನ್ನುವವರಿಗೆ ಸೇರಿದ ಪ್ರವಾಸಿ ಬೋಟ್ ಇದಾಗಿದ್ದು, ನಿಗದಿಗಿಂತ ಹೆಚ್ಚಿನ ಜನರನ್ನು ದೋಣಿಯಲ್ಲಿ ಹತ್ತಿಸಿಕೊಂಡಿದ್ದರಿಂದ ಮಗುಚಿದೆ. ಗೋಕರ್ಣ ಪೊಲೀಸ್ ಠಾಣಾ ವ್ಯಾಪ್ತಿಯಲ್ಲಿ ಘಟನೆ ನಡೆದಿದೆ.

ಇದನ್ನೂ ಓದಿ: Karnataka Weather : ವರ್ಷಾಘಾತಕ್ಕೆ ಜನ ಸುಸ್ತು; ಮಳೆಯಾಟಕ್ಕೆ ಬಿರುಗಾಳಿ ಸಾಥ್‌

Continue Reading

ಮಳೆ

Karnataka Weather : ವರ್ಷಾಘಾತಕ್ಕೆ ಜನ ಸುಸ್ತು; ಮಳೆಯಾಟಕ್ಕೆ ಬಿರುಗಾಳಿ ಸಾಥ್‌

Bengaluru Rain : ಬೆಂಗಳೂರು ಸೇರಿದಂತೆ ರಾಜ್ಯಾದ್ಯಂತ ಗುಡುಗು ಸಹಿತ ಬಿರುಗಾಳಿ ಮಳೆಯಾಗುವ (Heavy Rain alert) ನಿರೀಕ್ಷೆ ಇದೆ. ಜತೆಗೆ ಬಿಸಿಲಿನಿಂದ ತತ್ತರಿಸಿದ್ದ ಒಳನಾಡಿನಲ್ಲಿ ಗರಿಷ್ಠ ತಾಪಮಾನವು ಇಳಿಕೆ ಆಗಲಿದೆ ಎಂದು ಹವಾಮಾನ ಇಲಾಖೆ ಮುನ್ಸೂಚನೆಯನ್ನು (Karnataka weather Forecast) ನೀಡಿದೆ.

VISTARANEWS.COM


on

By

Karnataka Weather Forecast
Koo

ಬೆಂಗಳೂರು: ಮುಂದಿನ 5 ದಿನಗಳು ರಾಜ್ಯದ ಒಳನಾಡು ಭಾಗದಲ್ಲಿ ಗರಿಷ್ಠ ತಾಪಮಾನವು 2-4 ಡಿಗ್ರಿ ಸೆಲ್ಸಿಯಸ್ ಕಡಿಮೆಯಾಗುವ ಸಾಧ್ಯತೆ ಇದೆ. ಇದರಿಂದಾಗಿ ಬೇಸಿಗೆಯಿಂದ ತತ್ತರಿಸಿದ್ದವರಿಗೆ ವಾತಾವರಣವು ತಂಪಾಗಿ ಇರಲಿದೆ. ಮುಂದಿನ 24 ಗಂಟೆಯಲ್ಲಿ ಬಿರುಗಾಳಿಯೊಂದಿಗೆ ಭಾರಿ ಮಳೆಯಾಗುವ (Rain news) ಸಾಧ್ಯತೆ ಇದೆ ಎಂದು ಹವಾಮಾನ ಇಲಾಖೆ (Karnataka Weather Forecast) ಮುನ್ಸೂಚನೆಯನ್ನು ನೀಡಿದೆ. ಪ್ರತ್ಯೇಕ ಕಡೆಗಳಲ್ಲಿ ಗುಡುಗು, ಸಿಡಿಲು ಸಂಭವಿಸಲಿದೆ.

ರಾಜಧಾನಿ ಬೆಂಗಳೂರಲ್ಲಿ ಸಾಮಾನ್ಯವಾಗಿ ಮೋಡ ಕವಿದ ವಾತಾವರಣವಿರುತ್ತದೆ. ಸಾಧಾರಣ ಮಳೆಯೊಂದಿಗೆ ಗುಡುಗು ಸಹಿತ ಕೆಲವೆಡೆ ಭಾರಿ ಮಳೆಯಾಗುವ ಸಾಧ್ಯತೆ ಇದೆ. ಗರಿಷ್ಠ ಮತ್ತು ಕನಿಷ್ಠ ತಾಪಮಾನವು ಕ್ರಮವಾಗಿ 29 ಮತ್ತು 22 ಡಿ.ಸೆ ಇರಲಿದೆ.

ಇದನ್ನೂ ಓದಿ: Karnataka Rain : ವಿಜಯನಗರದಲ್ಲಿ ಸಿಡಿಲಿಗೆ ಜಾನುವಾರು ಬಲಿ; ಬೆಂಗಳೂರು ಸೇರಿ ಹಲವೆಡೆ ಭಾರಿ ಮಳೆ

ಕರಾವಳಿಯಲ್ಲಿ ದಕ್ಷಿಣ ಕನ್ನಡ, ಉಡುಪಿ ಜಿಲ್ಲೆಗಳಲ್ಲಿ ಪ್ರತ್ಯೇಕ ಸ್ಥಳಗಳಲ್ಲಿ ಭಾರೀ ಮಳೆಯ ಎಚ್ಚರಿಕೆಯನ್ನು ನೀಡಲಾಗಿದೆ. ಮಲೆನಾಡಿನ ಕೊಡಗು, ಶಿವಮೊಗ್ಗ, ಹಾಸನ, ಚಿಕ್ಕಮಗಳೂರು ಹಾಗೂ ದಕ್ಷಿಣ ಒಳನಾಡಿನ ಮೈಸೂರು, ಚಾಮರಾಜನಗರದಲ್ಲಿ ಗಾಳಿಯು ಗಂಟೆಗೆ 40-50 ಕಿ.ಮೀ ವೇಗದಲ್ಲಿ ಬೀಸಲಿದ್ದು, ಭಾರೀ ಮಳೆಯೊಂದಿಗೆ ಗುಡುಗು ಇರಲಿದೆ.

ಜತೆಗೆ ಮಂಡ್ಯ, ರಾಮನಗರ, ದಾವಣಗೆರೆ ಜಿಲ್ಲೆಗಳಲ್ಲಿ ಗಾಳಿ ಸಹಿತ ಮಳೆಯಾಗಲಿದೆ. ಕರಾವಳಿಯ ಉತ್ತರ ಕನ್ನಡ ಜಿಲ್ಲೆಯಲ್ಲಿ ಗುಡುಗು ಸಹಿತ ಮಳೆಯಾಗುವ ನಿರೀಕ್ಷೆ ಇದೆ. ಬಾಗಲಕೋಟೆ, ಬೆಳಗಾವಿ, ಧಾರವಾಡ, ಗದಗ, ಹಾವೇರಿ, ಕೊಪ್ಪಳ, ವಿಜಯಪುರ, ಬಳ್ಳಾರಿ, ಬೆಂಗಳೂರು ಗ್ರಾಮಾಂತರ, ಬೆಂಗಳೂರು ನಗರ, ಚಿಕ್ಕಬಳ್ಳಾಪುರ, ಕೋಲಾರ, ತುಮಕೂರು, ವಿಜಯನಗರ ಸೇರಿದಂತೆ ಚಿತ್ರದುರ್ಗದ ಅನೇಕ ಸ್ಥಳಗಳಲ್ಲಿ ಗುಡುಗು ಸಹಿತ ಗಾಳಿಯೊಂದಿಗೆ (40-50 kmph) ಸಾಧಾರಣ ಮಳೆಯಾಗುವ ಸಾಧ್ಯತೆಯಿದೆ.

ಈ ಸಂಗತಿಯ ಕುರಿತು ನಿಮ್ಮ ಅನಿಸಿಕೆ ಏನು? ಕಾಮೆಂಟ್ ಮೂಲಕ ತಿಳಿಸಿ

Continue Reading

ಕರ್ನಾಟಕ

Bengaluru Rain: ಬೆಂಗಳೂರಿನಲ್ಲಿ ಮುಂದುವರಿದ ಮಳೆ ಆರ್ಭಟ; ರಸ್ತೆಗಳು ಜಲಾವೃತ, ಹಲವೆಡೆ ಸಂಚಾರ ಅಸ್ತವ್ಯಸ್ತ

Bengaluru Rain: ಧಾರಾಕಾರ ಮಳೆಯಿಂದ ಬೆಂಗಳೂರಿನ ಪ್ರಮುಖ ರಸ್ತೆಗಳು ಜಲಾವೃತವಾಗಿದ್ದರಿಂದ ಸಂಚಾರ ಅಸ್ತವ್ಯಸ್ತವಾಯಿತು.

VISTARANEWS.COM


on

Bengaluru Rain
ಭಾರಿ ಮಳೆಯಿಂದ ದೇವನಹಳ್ಳಿ ಹೊರವಲಯದ ಬೈಪಾಸ್‌ನ ಕೆಂಪೇಗೌಡ ಸರ್ಕಲ್‌ ಕೆರೆಯಂತೆ ಬದಲಾಗಿತ್ತು
Koo

ಬೆಂಗಳೂರು: ರಾಜಧಾನಿಯಲ್ಲಿ ಭಾನುವಾರವೂ ಮಳೆ ಆರ್ಭಟ (Bengaluru Rain) ಮುಂದುವರಿಯಿತು. ನಗರದ ಹಲವೆಡೆ ಸುರಿದ ಧಾರಾಕಾರ ಮಳೆಯಿಂದ ಪ್ರಮುಖ ರಸ್ತೆಗಳು ಜಲಾವೃತವಾಗಿದ್ದರಿಂದ ಸಂಚಾರ ಅಸ್ತವ್ಯಸ್ತವಾಯಿತು. ಇದರಿಂದ ವಾಹನ ಸವಾರರು ಪರದಾಡಿದರು.

ಚಿಕ್ಕಪೇಟೆ, ಮೆಜೆಸ್ಟಿಕ್, ಯಲಹಂಕ, ಯಶವಂತಪುರ, ಲಗ್ಗೆರೆ, ರಾಜಾಜಿನಗರದಲ್ಲಿ ಭಾರಿ ಮಳೆಯಾಯಿತು. ಕಸ್ತೂರಿ ನಗರ ಕಡೆಯಿಂದ ಎಂಎಂಟಿ ಜಂಕ್ಷನ್ (ಕೆ.ಆರ್.ಪುರ) ಕಡೆಗೆ ಹೋಗುವ ಮಾರ್ಗದಲ್ಲಿ ಭಾರಿ ಪ್ರಮಾಣದ ನೀರು ನಿಂತಿದ್ದರಿಂದ ವೈಟ್‌ಫೀಲ್ಡ್‌, ಮಹದೇವಪುರ ಮತ್ತು ಕೆ.ಆರ್.ಪುರ ಕಡೆಗೆ ನಿಧಾನಗತಿಯ ವಾಹನ ಸಂಚಾರ ಕಂಡುಬಂದಿತು.

ಇನ್ನು ಪೈಪ್‌ಲೈನ್ ಮುಖ್ಯ ರಸ್ತೆಯ ಕಮಲಾ ನಗರದಲ್ಲಿ ರಸ್ತೆಯಲ್ಲಿ ನೀರು ನಿಂತಿದ್ದರಿಂದ ಪಾದಾಚಾರಿಗಳು ಮತ್ತು ವಾಹನ ಸವಾರರು ರಸ್ತೆ ದಾಟಲು ಪರದಾಡಬೇಕಾಯಿತು. ರಸ್ತೆಗಳು ಜಲಾವೃತವಾಗಿದ್ದರಿಂದ ರಾಮಮೂರ್ತಿ ನಗರ – ಟಿನ್ ಫ್ಯಾಕ್ಟರಿ ರಸ್ತೆ, ಸಂಜಯನಗರ ಕ್ರಾಸ್ – ವಿಮಾನ ನಿಲ್ದಾಣ ರಸ್ತೆ, ಹುಣಸಮಾರನಹಳ್ಳಿ ಸರ್ವಿಸ್ ರಸ್ತೆ, ಬಿಇಎಲ್‌ನಿಂದ ಹೆಬ್ಬಾಳ ಮಾರ್ಗ, ಅನಿಲ್ ಕುಂಬ್ಳೆ ಜಂಕ್ಷನ್-ಬಿಆರ್ವಿ ಜಂಕ್ಷನ್ ರಸ್ತೆಯಲ್ಲಿ ಭಾರಿ ಸಂಚಾರ ದಟ್ಟಣೆ ಉಂಟಾಯಿತು.

ಕೆರೆಯಂತಾದ ದೇವನಹಳ್ಳಿಯ ಸರ್ಕಲ್

ದೇವನಹಳ್ಳಿ: ಪಟ್ಟಣದ ಸುತ್ತಮುತ್ತಲ ಪ್ರದೇಶದಲ್ಲಿ ಧಾರಕಾರ ಮಳೆ ಸುರಿದಿದೆ. ನಿರಂತರ ಒಂದು ಗಂಟೆ ಸುರಿದ ಮಳೆಗೆ ಪಟ್ಟಣದ ಹೊರವಲಯದ ಬೈಪಾಸ್‌ನ ಕೆಂಪೇಗೌಡ ಸರ್ಕಲ್‌ ಕೆರೆಯಂತೆ ಬದಲಾಗಿತ್ತು. ಸುಮಾರು ಮೂರು ಅಡಿಗಿಂತ ಹೆಚ್ಚು ನೀರು ನಿಂತಿದ್ದರಿಂದ ವಾಹನ ಸವಾರರು ಮುಂದೆ ಹೋಗಲು ಹೈರಾಣಾದರು.

ಆನೇಕಲ್ ಭಾಗದಲ್ಲಿ ಮಳೆರಾಯನ ಸಿಂಚನ

ಆನೇಕಲ್: ಬೆಂಗಳೂರು ನಗರ ಹೊರವಲಯದ ಆನೇಕಲ್ ಭಾಗದಲ್ಲಿ ಮಳೆರಾಯನ ಸಿಂಚನ ಕಂಡುಬಂತು. ಆನೇಕಲ್, ಅತ್ತಿಬೆಲೆ, ಸರ್ಜಾಪುರ ಭಾಗದಲ್ಲಿ ಕಳೆದೊಂದು ವಾರದಿಂದ ನಿರಂತರ ಮಳೆಯಾಗುತ್ತಿದೆ. ಇದರಿಂದ ಕೃಷಿ ಚಟುವಟಿಕೆ ಚುರುಕುಗೊಂಡಿದ್ದು, ರೈತರ ಮೊಗದಲ್ಲಿ ಮಂದಹಾಸ ಮೂಡಿದೆ.

ಇದನ್ನೂ ಓದಿ | Karnataka Rain : ಒಂದೇ ಮಳೆಗೆ ಹೊಳೆಯಂತಾದ ಬೆಂಗಳೂರು ರಸ್ತೆಗಳು! ಕಳಸದಲ್ಲೂ ಮುಂದುವರಿದ ಅಬ್ಬರ

ರಾಜ್ಯದ 17 ಜಿಲ್ಲೆಗಳಿಗೆ ಆರೆಂಜ್, ಯೆಲ್ಲೋ ಅಲರ್ಟ್

ರಾಜ್ಯದಲ್ಲಿ ಪೂರ್ವ ಮುಂಗಾರು ಚುರುಕುಗೊಂಡಿದ್ದು, 17 ಜಿಲ್ಲೆಗಳಿಗೆ ಆರೆಂಜ್ ಹಾಗೂ ಯೆಲ್ಲೋ ಅಲರ್ಟ್ ಘೋಷಣೆ ಮಾಡಲಾಗಿದೆ. ಕರಾವಳಿ ಹಾಗೂ ದಕ್ಷಿಣ ಕನ್ನಡ ಜಿಲ್ಲೆಗಳಿಗೆ‌ ಯೆಲ್ಲೋ ಅಲರ್ಟ್ ಘೋಷಿಸಲಾಗಿದ್ದು, ಮುಂದಿನ ನಾಲ್ಕು ದಿನಗಳ ಕಾಲ ಭಾರಿ ಮಳೆ ಸಾಧ್ಯತೆ ಇದೆ. ಹೀಗಾಗಿ ಮೀನುಗಾರರಿಗೆ ಸಮುದ್ರದಲ್ಲಿ ಇಳಿಯದಂತೆ ಹವಾಮಾನ ಇಲಾಖೆ ಸೂಚನೆ ನೀಡಿದೆ.

ಕುಷ್ಟಗಿಯಲ್ಲಿ ಸಿಡಿಲು ಬಡಿದು ರೈತ ಸಾವು

ಕೊಪ್ಪಳ: ಸಿಡಿಲು ಬಡಿದು (Lightning strike) ರೈತ ಮೃತಪಟ್ಟಿರುವ ಘಟನೆ ಕೊಪ್ಪಳ ಜಿಲ್ಲೆಯ ಕುಷ್ಟಗಿ ತಾಲೂಕಿನ ಬಚನಾಳ ಗ್ರಾಮದಲ್ಲಿ ನಡೆದಿದೆ. ಉತ್ತಮ ಮಳೆ (Rain News) ಹಿನ್ನೆಲೆಯಲ್ಲಿ ಜಮೀನಿನಲ್ಲಿ ಬಿತ್ತನೆ ಸಲುವಾಗಿ ಕೃಷಿ ಚಟುವಟಿಕೆ ಮಾಡುತ್ತಿದ್ದಾಗ ಅವಘಡ ನಡೆದಿದ್ದು, ಈಶಪ್ಪ ಕಳಮಳ್ಳಿ (40) ಮೃತ ರೈತ.

ಮಳೆ ಬಂದ ಖುಷಿಯಲ್ಲಿ ಎತ್ತುಗಳೊಂದಿಗೆ ರೈತ ಭೂಮಿ ಹದ ಮಾಡುತ್ತಿದ್ದ. ಈ ವೇಳೆ ಸಿಡಿಲು ಬಡಿದು ರೈತ ಈಶಪ್ಪ ಕಳಮಳ್ಳಿ ಮೃತಪಟ್ಟಿದ್ದು, ಅದೃಷ್ಟವಶಾತ್ ಪ್ರಾಣಾಪಾಯದಿಂದ ರೈತನ ಸಹೋದರ ಪಾರಾಗಿದ್ದಾನೆ. ಸ್ಥಳದಲ್ಲಿ ಕುಟುಂಬಸ್ಥರ ಆಕ್ರಂದನ ಮುಗಿಲು ಮುಟ್ಟಿದೆ.

ಸಿಡಿಲು ಬಡಿದು ಯುವಕನಿಗೆ ಗಂಭೀರ ಗಾಯ

ಧಾರವಾಡ: ಸಿಡಿಲು ಬಡಿದು ಯುವಕ ಗಂಭೀರವಾಗಿ ಗಾಯಗೊಂಡಿರುವ ಘಟನೆ ಧಾರವಾಡದ ಮುಗದ ಗ್ರಾಮದ ಕೆರೆ ಬಳಿ ನಡೆದಿದೆ. ಇಂದು ಮಧ್ಯಾಹ್ನ ಸುರಿದ ಸಿಡಿಲು ಸಹಿತ ಮಳೆ ವೇಳೆ ಅವಘಡ ನಡೆದಿದೆ. ದಡ್ಡಿಕಮಲಾಪುರ ಗ್ರಾಮದ ನಿವಾಸಿ ರವಿ ಕೊರಮಡ್ಡಿ ಗಾಯಾಳು. ಇದೆ ವೇಳೆ ಸಿಡಿಲಿಗೆ ಎಮ್ಮೆ ಕರು ಬಲಿಯಾಗಿದೆ. ಗಂಭೀರ ಗಾಯಗೊಂಡ ಯುವಕನನ್ನು ಖಾಸಗಿ ಆಸ್ಪತ್ರೆಗೆ ಸೇರಿಸಲಾಗಿದೆ.

Continue Reading
Advertisement
Prajwal Revanna Case One more SPP appointed for SIT cases Govt gears up for arguments in High Court
ಕ್ರೈಂ17 mins ago

Prajwal Revanna Case: ಎಸ್‌ಐಟಿ ಕೇಸ್‌ಗಳಿಗಾಗಿ ಇನ್ನೊಬ್ಬ ಎಸ್‌ಪಿಪಿ ನೇಮಕ; ಹೈಕೋರ್ಟ್‌ನಲ್ಲಿ ವಾದಕ್ಕೆ ಸಜ್ಜಾದ ಸರ್ಕಾರ

MS Dhoni Retirement
ಕ್ರಿಕೆಟ್21 mins ago

MS Dhoni Retirement: ಧೋನಿ ನಿವೃತ್ತಿ ಬಗ್ಗೆ ಮಹತ್ವದ ಹೇಳಿಕೆ ಕೊಟ್ಟ ಚೆನ್ನೈ ಫ್ರಾಂಚೈಸಿ

Kannada New Movie sanju weds geetha another movie came
ಸ್ಯಾಂಡಲ್ ವುಡ್24 mins ago

Kannada New Movie: `ಸಂಜು ವೆಡ್ಸ್ ಗೀತಾ’ ಚಿತ್ರದ ನಿರ್ಮಾಪಕರಿಂದ ಬರ್ತಿದೆ ಮತ್ತೊಂದು ಅದ್ಧೂರಿ ಚಿತ್ರ!

HD Revanna
ಪ್ರಮುಖ ಸುದ್ದಿ27 mins ago

HD Revanna: ಹೊಳೆನರಸೀಪುರ ಲೈಂಗಿಕ ದೌರ್ಜನ್ಯ ಪ್ರಕರಣದಲ್ಲೂ ಎಚ್‌ಡಿ ರೇವಣ್ಣಗೆ ಜಾಮೀನು, ಬಿಗ್‌ ರಿಲೀಫ್

IPL 2024
ಕ್ರೀಡೆ1 hour ago

IPL 2024: ಪ್ಲೇ ಆಫ್ ಪಂದ್ಯಗಳಿಗೆ ಮೀಸಲು ದಿನ ಇದೆಯೇ? ಮಳೆ ಬಂದರೆ ಫಲಿತಾಂಶ ನಿರ್ಧಾರ ಹೇಗೆ?

how many seats will the Congress have in the Lok Sabha elections CM Siddaramaiah statement
Lok Sabha Election 20241 hour ago

CM Siddaramaiah: ಲೋಕಸಭಾ ಚುನಾವಣೆಯಲ್ಲಿ ಸಿಎಂ ಸಿದ್ದರಾಮಯ್ಯ ಪ್ರಕಾರ ಕಾಂಗ್ರೆಸ್‌ಗೆ ಎಷ್ಟು ಸೀಟ್‌? ಸಂಪುಟ ಪುನಾರಚನೆ ಇಲ್ಲ!

Yami Gautam welcome baby boy
ಬಾಲಿವುಡ್1 hour ago

Yami Gautam: ನಟಿ ಯಾಮಿ ಗೌತಮ್‌ಗೆ ಗಂಡು ಮಗು; ಕಂದಮ್ಮನ ಹೆಸರೇನು?

Liquid Nitrogen Paan
ದೇಶ1 hour ago

Liquid Nitrogen Paan: ನೀವು ಲಿಕ್ವಿಡ್ ನೈಟ್ರೋಜನ್‌ ಪಾನ್‌ ಸೇವಿಸ್ತೀರಾ? ಹಾಗಿದ್ರೆ ಎಚ್ಚರ.. ಎಚ್ಚರ

road Accident in Mandya
ಮಂಡ್ಯ2 hours ago

Road Accident : ಬಸ್‌ ಗುದ್ದಿದ ರಭಸಕ್ಕೆ ಕಾರು ಛಿದ್ರ ಛಿದ್ರ; ಚಾಲಕ ಸ್ಪಾಟ್‌ ಡೆತ್‌, ನಾಲ್ವರಿಗೆ ಗಾಯ

CET result only after II PU 2nd exam Published on May 30 or 31
ಶಿಕ್ಷಣ2 hours ago

CET Result: ದ್ವಿತೀಯ ಪಿಯು 2ನೇ ಪರೀಕ್ಷೆ ಬಳಿಕವೇ ಸಿಇಟಿ ಫಲಿತಾಂಶ; ಮೇ 30 ಅಥವಾ 31ಕ್ಕೆ ಪ್ರಕಟ?

Sharmitha Gowda in bikini
ಕಿರುತೆರೆ8 months ago

Geetha Serial Kannada: ನಿದ್ದೆ ಕದ್ದ ಚೋರಿ! ನಟಿ `ಭಾನುಮತಿ’ ಹಾಟ್‌ ಪೋಟೊಗಳಿಗೆ ಫ್ಯಾನ್ಸ್ ಫುಲ್ ಫಿದಾ

Kannada Serials
ಕಿರುತೆರೆ7 months ago

Kannada Serials TRP: 2ನೇ ಸ್ಥಾನದಲ್ಲಿ 2 ಧಾರಾವಾಹಿಗಳು; ಟಿಆರ್‌ಪಿ ರೇಸ್‌ನಲ್ಲಿಲ್ಲ ಭಾಗ್ಯಲಕ್ಷ್ಮೀ!

Bigg Boss- Saregamapa 20 average TRP
ಕಿರುತೆರೆ7 months ago

Kannada Serials TRP: ಏಳನೇ ಸ್ಥಾನಕ್ಕೆ ʻಅಮೃತಧಾರೆʼ ಕುಸಿತ; ಬಿಗ್‌ ಬಾಸ್‌-ಸರಿಗಮಪ ಟಿಆರ್‌ಪಿ ಎಷ್ಟು?

galipata neetu
ಕಿರುತೆರೆ6 months ago

Kanyadana Serial: ಕಿರುತೆರೆಗೆ ಮತ್ತೆ ಎಂಟ್ರಿ ಕೊಟ್ಟ ʻಗಾಳಿಪಟʼ ಖ್ಯಾತಿಯ ʻನೀತುʼ!

Kannada Serials
ಕಿರುತೆರೆ8 months ago

Kannada Serials TRP: ನಾಲ್ಕನೇ ಸ್ಥಾನಕ್ಕೆ ಕುಸಿತ ಕಂಡ ʻಸೀತಾ ರಾಮʼ; ಟಿಆರ್‌ಪಿ ರೇಸ್‌ಗೆ ʻಭಾಗ್ಯಲಕ್ಷ್ಮಿʼ ಬ್ಯಾಕ್‌!

Kannada Serials
ಕಿರುತೆರೆ8 months ago

Kannada Serials TRP: ಟಿಆರ್‌ಪಿಯಲ್ಲಿ ʻಭಾಗ್ಯಲಕ್ಷ್ಮೀʼ ಹವಾ; ʻಪುಟ್ಟಕ್ಕನ ಮಕ್ಕಳುʼ ಧಾರಾವಾಹಿಗೆ ಸಂಕಷ್ಟ!

Bigg Boss' dominates TRP; Sita Rama fell to the sixth position
ಕಿರುತೆರೆ7 months ago

Kannada Serials TRP: ಟಿಆರ್‌ಪಿಯಲ್ಲಿ ʻಬಿಗ್ ಬಾಸ್ʼದೇ ಮೇಲುಗೈ; 6ನೇ ಸ್ಥಾನಕ್ಕೆ ಕುಸಿದ ʻಸೀತಾ ರಾಮʼ

geetha serial Dhanush gowda engagement
ಕಿರುತೆರೆ5 months ago

Dhanush Gowda: ಗೀತಾ ಧಾರಾವಾಹಿ ನಟನ ನಿಶ್ಚಿತಾರ್ಥ; ಭವ್ಯಾಳ ಕಮೆಂಟ್‌ ಬಾಕ್ಸ್‌ ಆಫ್‌!

varun
ಕಿರುತೆರೆ6 months ago

Brindavana Serial: ʼಬೃಂದಾವನʼ ಧಾರಾವಾಹಿಯಲ್ಲಿ ದೊಡ್ಡ ಟ್ವಿಸ್ಟ್‌; ಪ್ರಮುಖ ಪಾತ್ರಧಾರಿಯೇ ಬದಲು

Kannada Serials
ಕಿರುತೆರೆ8 months ago

Kannada Serials TRP: ಟಿಆರ್‌ಪಿಯಲ್ಲಿ ಏರಿಕೆ ಕಂಡ ʻಅಮೃತಧಾರೆʼ; ʻಗಟ್ಟಿಮೇಳʼಕ್ಕೆ ನಾಲ್ಕನೇ ಸ್ಥಾನ!

Karnataka Rain
ಮಳೆ2 hours ago

Karnataka Rain : ಬಂಗಾಳ ಕೊಲ್ಲಿಯಲ್ಲಿ ವಾಯುಭಾರ ಕುಸಿತ; ಸಮುದ್ರಕ್ಕಿಳಿಯದಂತೆ ಮೀನುಗಾರರಿಗೆ ಎಚ್ಚರಿಕೆ

Karnataka Rain
ಮಳೆ24 hours ago

Karnataka Rain : ಒಂದೇ ಮಳೆಗೆ ಹೊಳೆಯಂತಾದ ಬೆಂಗಳೂರು ರಸ್ತೆಗಳು! ಕಳಸದಲ್ಲೂ ಮುಂದುವರಿದ ಅಬ್ಬರ

Karnataka rain
ಮಳೆ1 day ago

Karnataka Rain : ವಿಜಯನಗರದಲ್ಲಿ ಸಿಡಿಲಿಗೆ ಜಾನುವಾರು ಬಲಿ; ಬೆಂಗಳೂರು ಸೇರಿ ಹಲವೆಡೆ ಭಾರಿ ಮಳೆ

Karnataka Rain
ಮಳೆ1 day ago

Karnataka Rain: ಧಾರಾಕಾರ ಮಳೆಗೆ ಕಾಂಪೌಂಡ್ ಕುಸಿದು 4 ಬೈಕ್‌ಗಳು ಜಖಂ; ಮದುವೆ ಮಂಟಪಕ್ಕೆ ನುಗ್ಗಿದ ನೀರು‌

Prajwal Revanna Case JDS calls CD Shivakumar pen drive gang
ರಾಜಕೀಯ3 days ago

Prajwal Revanna Case: CD ಶಿವಕುಮಾರ್ ಪೆನ್ ಡ್ರೈವ್ ಗ್ಯಾಂಗ್ ಎಂದ ಕುಟುಕಿದ ಜೆಡಿಎಸ್‌!

Karnataka weather Forecast
ಮಳೆ3 days ago

Karnataka Weather : ಮೈಸೂರು, ಮಂಡ್ಯ ಸೇರಿ ಈ 7 ಜಿಲ್ಲೆಗಳಲ್ಲಿ ವ್ಯಾಪಕ ಮಳೆ ಸಂಭವ

Dina Bhavishya
ಭವಿಷ್ಯ3 days ago

Dina Bhavishya : ಈ ರಾಶಿಯ ಪ್ರೇಮಿಗಳಿಗೆ ಮನೆಯಿಂದ ಸಿಗುತ್ತೆ ಗ್ರೀನ್‌ ಸಿಗ್ನಲ್‌

Karnataka Weather Forecast
ಮಳೆ4 days ago

Karnataka Weather : ಭಾರಿ ಮಳೆಗೆ ಕೊಟ್ಟೂರು ಬಸ್ ಸ್ಟ್ಯಾಂಡ್‌ ಜಲಾವೃತ; ‌ ತಾಯಿ-ಮಗ ಗ್ರೇಟ್‌ ಎಸ್ಕೇಪ್‌

Drowned in water
ಹಾಸನ4 days ago

Drowned in water : ಕೆರೆಯಲ್ಲಿ ಈಜಲು ಹೋದ ನಾಲ್ವರು ನೀರುಪಾಲು; ಓರ್ವ ಬಾಲಕ ಪಾರು

Suspicious Case
ಬೆಂಗಳೂರು4 days ago

Suspicious Case : ಬಾತ್‌ ರೂಂನಲ್ಲಿತ್ತು ಕಾಲೇಜು ಹುಡುಗಿ ಡೆಡ್‌ ಬಾಡಿ; ಕುತ್ತಿಗೆ ಕೊಯ್ದು ಸಾಯಿಸಿದವರು ಯಾರು?

ಟ್ರೆಂಡಿಂಗ್‌