Uttara Kannada News: ಬನವಾಸಿಯ ಶ್ರೀ ಮಧುಕೇಶ್ವರ ದೇವಸ್ಥಾನಕ್ಕೆ ಬಿಜೆಪಿ ರಾಜ್ಯ ವಕ್ತಾರ ಹರಿಪ್ರಕಾಶ್ ಕೋಣೆಮನೆ ಭೇಟಿ; ವಿಶೇಷ ಪೂಜೆ - Vistara News

ಉತ್ತರ ಕನ್ನಡ

Uttara Kannada News: ಬನವಾಸಿಯ ಶ್ರೀ ಮಧುಕೇಶ್ವರ ದೇವಸ್ಥಾನಕ್ಕೆ ಬಿಜೆಪಿ ರಾಜ್ಯ ವಕ್ತಾರ ಹರಿಪ್ರಕಾಶ್ ಕೋಣೆಮನೆ ಭೇಟಿ; ವಿಶೇಷ ಪೂಜೆ

Uttara Kannada News: ಬನವಾಸಿಯ ಐತಿಹಾಸಿಕ ಮಾತೋಬರ ಶ್ರೀ ಮಧುಕೇಶ್ವರ ದೇವಸ್ಥಾನಕ್ಕೆ ಶುಕ್ರವಾರ ಬಿಜೆಪಿ ರಾಜ್ಯ ವಕ್ತಾರ ಹರಿಪ್ರಕಾಶ್ ಕೋಣೆಮನೆ ಭೇಟಿ ನೀಡಿ, ವಿಶೇಷ ಪೂಜೆ ಸಲ್ಲಿಸಿದರು.

VISTARANEWS.COM


on

BJP State Spokesperson Hariprakash konemane visit Shri Madhukeshwara Temple
ಮಹತ್ವದ, ಕುತೂಹಲಕರ ಸುದ್ದಿಗಾಗಿ ಫಾಲೊ ಮಾಡಿ
Koo

ಬನವಾಸಿ: ಇಲ್ಲಿಯ ಐತಿಹಾಸಿಕ ಮಾತೋಬಾರ ಶ್ರೀ ಮಧುಕೇಶ್ವರ ದೇವಸ್ಥಾನಕ್ಕೆ (Shri Madhukeshwara Temple) ಶುಕ್ರವಾರ ಬಿಜೆಪಿ ರಾಜ್ಯ ವಕ್ತಾರ ಹರಿಪ್ರಕಾಶ್ ಕೋಣೆಮನೆ ಭೇಟಿ ನೀಡಿ, ವಿಷೇಶ ಪೂಜೆ (Uttara Kannada News) ಸಲ್ಲಿಸಿದರು.

ಬಳಿಕ ಮಾತನಾಡಿದ ಅವರು, ಈಶ್ವರನ ಕೃಪೆಯಿಂದ ನಾಡಿನಲ್ಲಿ ಸಮೃದ್ಧಿ ನೆಲೆಸಲಿ. ಪರಶಿವನು ಎಲ್ಲರ ಬಾಳಿನಲ್ಲಿ ಮಂಗಳವನ್ನುಂಟುಮಾಡಲಿ, ಎಲ್ಲರಿಗೂ ಸುಖ-ಶಾಂತಿ, ನೆಮ್ಮದಿ ಕರುಣಿಸಲಿ ಎಂದು ಪ್ರಾರ್ಥಿಸುತ್ತೇನೆ ಎಂದು ತಿಳಿಸಿದರು.

ಇದನ್ನೂ ಓದಿ: Ind vs Eng : ಗಿಲ್, ರೋಹಿತ್​ ಶತಕ, ಭಾರತಕ್ಕೆ 255 ರನ್​ ಮುನ್ನಡೆ

ಬನವಾಸಿಯ ನಮೋ ಅಭಿಮಾನಿ ಬಳಗದ ಕಾರ್ಯಕರ್ತರೊಂದಿಗೆ ಭಕ್ತರಿಗೆ ಮಜ್ಜಿಗೆ ವಿತರಣಾ ಕಾರ್ಯದಲ್ಲಿ ಭಾಗಿಯಾದರು.

ಇದನ್ನೂ ಓದಿ: Karnataka Weather : ಇಂದಿನಿಂದ ಮಾರ್ಚ್‌ 14ರವರೆಗೆ ರಾಜ್ಯಾದ್ಯಂತ ಒಣಹವೆ ಸಾಧ್ಯತೆ

ಈ ಸಂದರ್ಭದಲ್ಲಿ ಅ.ಭಾ.ಸಾ.ಪ. ರಾಜ್ಯ ಪ್ರಧಾನ ಕಾರ್ಯದರ್ಶಿ ರಘುನಂದನ್ ಭಟ್, ಪ್ರಮುಖರಾದ ಶಿವಕುಮಾರ ದೇಸಾಯಿ ಗೌಡ, ರವೀಶ್ ಹೆಗಡೆ, ಅರವಿಂದ ಬಳೆಗಾರ, ಬಿಜೆಪಿ ಜಿಲ್ಲಾ ರೈತ ಮೋರ್ಚಾ ಮಾಧ್ಯಮ ಸಲಹೆಗಾರ ಸುಧೀರ್ ನಾಯರ್, ನಮೋ ಅಭಿಮಾನಿ ಬಳಗದ ಪ್ರಶಾಂತ್ ಶೇಟ್, ಸಿದ್ಧಲಿಂಗೇಶ ಕಬ್ಬೂರ, ದೇವಸ್ಥಾನ ಆಡಳಿತ ಮಂಡಳಿಯ ಸದಸ್ಯರಾದ ಜಯಶಂಕರ ಮೇಸ್ತ್ರಿ, ದಯಾನಂದ ಮರಾಠೆ, ಇಕೋ ಮಂಜು ಹಾಗೂ ಬಿಜೆಪಿ ಕಾರ್ಯಕರ್ತರು, ಬಿಜೆಪಿಯ ಪ್ರಮುಖರು, ಪದಾಧಿಕಾರಿಗಳು ಹಾಗೂ ಇತರರು ಉಪಸ್ಥಿತರಿದ್ದರು.

ಕ್ಷಣ ಕ್ಷಣದ ಮಾಹಿತಿಗಾಗಿ Vistara News FaceBook ಪೇಜ್ ಫಾಲೋ ಮಾಡಿ
ಮಹತ್ವದ ಮಾಹಿತಿಗಾಗಿ ವಿಸ್ತಾರ ನ್ಯೂಸ್ ಆ್ಯಪ್ ಉಚಿತವಾಗಿ ಡೌನ್ ಲೋಡ್ ಮಾಡಿಕೊಳ್ಳಿ: Andriod App | IOS App
Continue Reading
Click to comment

Leave a Reply

Your email address will not be published. Required fields are marked *

ಉತ್ತರ ಕನ್ನಡ

SSLC Result 2024: ಎಸ್‌ಎಸ್‌ಎಲ್‌ಸಿ ಪರೀಕ್ಷೆಯಲ್ಲಿ ಸಾರ್ವಭೌಮ ಗುರುಕುಲಕ್ಕೆ ಶೇ.100 ಫಲಿತಾಂಶ

SSLC Result 2024: ಗೋಕರ್ಣದ ವಿಷ್ಣುಗುಪ್ತ ವಿಶ್ವವಿದ್ಯಾಪೀಠದ ಸಾರ್ವಭೌಮ ಗುರುಕುಲದ ವಿದ್ಯಾರ್ಥಿಗಳು ಎಸ್ಸೆಸ್ಸೆಲ್ಸಿ ಪರೀಕ್ಷೆಯಲ್ಲಿ ಸತತ ಮೂರನೇ ವರ್ಷ ಶೇಕಡಾ 100 ಫಲಿತಾಂಶ ಸಾಧಿಸಿದ್ದಾರೆ. ಸಾರ್ವಭೌಮ ಗುರುಕುಲ ಪಾರಂಪರಿಕ ಮತ್ತು ನವಯುಗದ ಸಮನ್ವಯ ಶಿಕ್ಷಣ ನೀಡುವ ದೇಶದ ಏಕೈಕ ಸಂಸ್ಥೆಯಾಗಿದ್ದು, ಪಾರಂಪರಿಕ ವಿಭಾಗದಲ್ಲಿ ಸಾಧನೆ ಮಾಡುವ ಜತೆಜತೆಗೆ ನವಯುಗ ಶಿಕ್ಷಣದಲ್ಲೂ ಯಾವುದೇ ಶಿಕ್ಷಣ ಸಂಸ್ಥೆಗಳ ವಿದ್ಯಾರ್ಥಿಗಳಿಗಿಂತ ನಾವು ಕಡಿಮೆ ಇಲ್ಲ ಎನ್ನುವುದನ್ನು ಈ ಸಾಧನೆ ತೋರಿಸಿಕೊಟ್ಟಿದೆ ಎಂದು ಮಾರ್ಗದರ್ಶಕರಾದ ಶ್ರೀಮಜ್ಜಗದ್ಗುರು ಶಂಕರಾಚಾರ್ಯ ಶ್ರೀರಾಘವೇಶ್ವರಭಾರತೀ ಮಹಾಸ್ವಾಮೀಜಿ ವಿದ್ಯಾರ್ಥಿಗಳ ಸಾಧನೆಯನ್ನು ಶ್ಲಾಘಿಸಿದ್ದಾರೆ.

VISTARANEWS.COM


on

Koo

ಗೋಕರ್ಣ: ವಿಷ್ಣುಗುಪ್ತ ವಿಶ್ವವಿದ್ಯಾಪೀಠದ ಸಾರ್ವಭೌಮ ಗುರುಕುಲದ ವಿದ್ಯಾರ್ಥಿಗಳು ಎಸ್ಸೆಸ್ಸೆಲ್ಸಿ ಪರೀಕ್ಷೆಯಲ್ಲಿ (SSLC Result 2024) ಸತತ ಮೂರನೇ ವರ್ಷ ಶೇಕಡಾ 100 ಫಲಿತಾಂಶ ಸಾಧಿಸಿದ್ದಾರೆ.

ಸಾರ್ವಭೌಮ ಗುರುಕುಲ ಪಾರಂಪರಿಕ ಮತ್ತು ನವಯುಗದ ಸಮನ್ವಯ ಶಿಕ್ಷಣ ನೀಡುವ ದೇಶದ ಏಕೈಕ ಸಂಸ್ಥೆಯಾಗಿದ್ದು, ಪಾರಂಪರಿಕ ವಿಭಾಗದಲ್ಲಿ ಸಾಧನೆ ಮಾಡುವ ಜತೆಜತೆಗೆ ನವಯುಗ ಶಿಕ್ಷಣದಲ್ಲೂ ಯಾವುದೇ ಶಿಕ್ಷಣ ಸಂಸ್ಥೆಗಳ ವಿದ್ಯಾರ್ಥಿಗಳಿಗಿಂತ ನಾವು ಕಡಿಮೆ ಇಲ್ಲ ಎನ್ನುವುದನ್ನು ಈ ಸಾಧನೆ ತೋರಿಸಿಕೊಟ್ಟಿದೆ ಎಂದು ಮಾರ್ಗದರ್ಶಕರಾದ ಶ್ರೀಮಜ್ಜಗದ್ಗುರು ಶಂಕರಾಚಾರ್ಯ ಶ್ರೀ ರಾಘವೇಶ್ವರಭಾರತೀ ಮಹಾಸ್ವಾಮೀಜಿ ವಿದ್ಯಾರ್ಥಿಗಳ ಸಾಧನೆಯನ್ನು ಕೊಂಡಾಡಿದ್ದಾರೆ.

ಇದನ್ನೂ ಓದಿ: SSLC Result 2024: ಎಸ್‌ಎಸ್‌ಎಲ್‌ಸಿ ಪರೀಕ್ಷೆಯಲ್ಲಿ ಮಗನ ಜತೆ ತಾಯಿಯೂ ಪಾಸ್!

ವಿವಿವಿ ಅಂಕಗಳಿಕೆ ಶಿಕ್ಷಣಕ್ಕೆ ಒತ್ತು ನೀಡದೇ ವಿದ್ಯಾರ್ಥಿಗಳ ಸಮಗ್ರ ವಿಕಾಸಕ್ಕೆ ಒತ್ತು ನೀಡುತ್ತದೆ. ಆದಾಗ್ಯೂ ಅಂಕ ಗಳಿಕೆಯಲ್ಲೂ ನಮ್ಮ ವಿದ್ಯಾರ್ಥಿಗಳು ಮುಂದಿರುವುದು ಸಂಸ್ಥೆಯ ಶ್ರೇಷ್ಠತೆಗೆ ಹಿಡಿದ ಕೈಗನ್ನಡಿ. ದೇಶದ ಭಾವಿ ಪ್ರಜೆಗಳ ಭದ್ರ ಭವಿಷ್ಯದ ಅಡಿಪಾಯ ಇದಾಗಿದ್ದು, ವಿದ್ಯಾರ್ಥಿಗಳ ಭವಿಷ್ಯ ಉಜ್ವಲವಾಗಿ ಎಂದು ಅವರು ಆಶೀರ್ವದಿಸಿದ್ದಾರೆ.

ಪರೀಕ್ಷೆ ತೆಗೆದುಕೊಂಡ 33 ವಿದ್ಯಾರ್ಥಿಗಳ ಪೈಕಿ 19 ಮಂದಿ ಅತ್ಯುನ್ನತ ದರ್ಜೆಯಲ್ಲಿ 13 ಮಂದಿ ಪ್ರಥಮ ಹಾಗೂ ಒಬ್ಬ ವಿದ್ಯಾರ್ಥಿ ದ್ವಿತೀಯ ದರ್ಜೆಯಲ್ಲಿ ಉತ್ತೀರ್ಣರಾಗಿದ್ದಾರೆ ಎಂದು ಮುಖ್ಯ ಶಿಕ್ಷಕಿ ಸೌಭಾಗ್ಯ ಭಟ್ಟ ಪ್ರಕಟಣೆಯಲ್ಲಿ ಹೇಳಿದ್ದಾರೆ.

ಪನ್ನಗ ಎಸ್. ಭಟ್ 613 ಅಂಕಗಳನ್ನು ಗಳಿಸಿ ಪ್ರಥಮ ಸ್ಥಾನ ಪಡೆದಿದ್ದರೆ, 603 ಅಂಕ ಗಳಿಸಿದ ರಾಮಚಂದ್ರ ಉಪಾಧ್ಯ ಎರಡನೇ ಸ್ಥಾನ ಗಳಿಸಿದ್ದಾರೆ. ತಲಾ 600 ಅಂಕಗಳನ್ನು ಪಡೆದ ಎನ್. ತನ್ವಿ ಗೌರಿ ಮತ್ತು ಸುಮುಖ ಹೆಗಡೆ ಜಿ ಮೂರನೇ ಸ್ಥಾನ ಹಂಚಿಕೊಂಡಿದ್ದಾರೆ.

ಇದನ್ನೂ ಓದಿ: Karnataka Weather : ಕೊಡಗು, ಕೊಪ್ಪಳ ಸೇರಿ ಹಲವೆಡೆ ಅಬ್ಬರಿಸುತ್ತಿರುವ ಗಾಳಿ- ಮಳೆ; ನಾಳೆಗೂ ವಾರ್ನಿಂಗ್‌

ಅತ್ಯುತ್ತಮ ಸಾಧನೆಗೆ ಕಾರಣವಾಗಿರುವ ವಿದ್ಯಾರ್ಥಿ ಹಾಗೂ ಶಿಕ್ಷಕರನ್ನು ಶಾಲಾ ಆಡಳಿತ ಮಂಡಳಿ ಅಧ್ಯಕ್ಷ ಅರುಣ್ ಹೆಗಡೆ, ವಿವಿವಿ ಗೌರವಾಧ್ಯಕ್ಷ ಡಿ.ಡಿ.ಶರ್ಮಾ, ಪಾರಂಪರಿಕ ವಿಭಾಗದ ವರಿಷ್ಠಾಚಾರ್ಯ ಸತ್ಯನಾರಾಯಣ ಶರ್ಮಾ ಮತ್ತಿತರರು ಅಭಿನಂದಿಸಿದ್ದಾರೆ.

Continue Reading

ಉತ್ತರ ಕನ್ನಡ

SSLC Result 2024: ಯಲ್ಲಾಪುರದ ವಿಶ್ವದರ್ಶನ ಶಿಕ್ಷಣ ಸಮೂಹ ಪ್ರೌಢಶಾಲೆಗಳ ಉತ್ತಮ ಸಾಧನೆ

SSLC Result 2024: 2023-24 ನೇ ಸಾಲಿನ ರಾಜ್ಯ ಎಸ್‌ಎಸ್‌ಎಲ್‌ಸಿ ಪರೀಕ್ಷಾ ಫಲಿತಾಂಶ ಪ್ರಕಟಗೊಂಡಿದ್ದು ಯಲ್ಲಾಪುರ ಪಟ್ಟಣದ ವಿಶ್ವದರ್ಶನ ಶಿಕ್ಷಣ ಸಮೂಹದ ಮೂರು ಪ್ರೌಢಶಾಲೆಗಳು ಉತ್ತಮ ಸಾಧನೆ ತೋರಿದೆ. ವಿಶ್ವದರ್ಶನ ಆಂಗ್ಲ ಮಾಧ್ಯಮ ಪ್ರೌಢಶಾಲೆಯು ಶೇ.98.48 ಫಲಿತಾಂಶ ದಾಖಲಿಸಿದ್ದು, ಶಾಲೆಯ ವಿದ್ಯಾರ್ಥಿನಿ ಪ್ರಣತಿ ವಿ. ಮೆಣಸುಮನೆ 625ಕ್ಕೆ 620 ಅಂಕ ಗಳಿಸಿ ರಾಜ್ಯಕ್ಕೆ 6ನೇ ಸ್ಥಾನ ಹಾಗೂ ತಾಲೂಕಿಗೆ ದ್ವಿತೀಯ ಸ್ಥಾನ ಪಡೆದಿದ್ದು ವಿಶೇಷವಾಗಿದೆ. ಅದೇ ರೀತಿ ಇಡಗುಂದಿಯ ವಿಶ್ವದರ್ಶನ ಕನ್ನಡ ಮಾಧ್ಯಮ ಪ್ರೌಢಶಾಲೆಯಲ್ಲಿ ಪರೀಕ್ಷೆಗೆ ಹಾಜರಾದ ಎಲ್ಲ ವಿದ್ಯಾರ್ಥಿಗಳೂ ಉತ್ತೀರ್ಣಗೊಂಡು ನೂರಕ್ಕೆ ನೂರು ಫಲಿತಾಂಶ ದಾಖಲಿಸಿ ಗಮನ ಸೆಳೆದಿದ್ದಾರೆ. ಯಲ್ಲಾಪುರದ ವಿಶ್ವದರ್ಶನ ಕನ್ನಡ ಮಾಧ್ಯಮ ಪ್ರೌಢಶಾಲೆಯುೂ ಕೂಡಾ ಉತ್ತಮ ಸಾಧನೆ ಮಾಡಿದ್ದು ಶೇ.98.24 ಫಲಿತಾಂಶ ಪಡೆದಿದೆ.

VISTARANEWS.COM


on

Yallapur Vishwadarshana Group of institutions performed well in SSLC Result 2024
Koo

ಯಲ್ಲಾಪುರ: 2023-24ನೇ ಸಾಲಿನ ರಾಜ್ಯ ಎಸ್‌ಎಸ್‌ಎಲ್‌ಸಿ ಪರೀಕ್ಷಾ ಫಲಿತಾಂಶ (SSLC Result 2024) ಪ್ರಕಟಗೊಂಡಿದ್ದು, ಪಟ್ಟಣದ ವಿಶ್ವದರ್ಶನ ಶಿಕ್ಷಣ ಸಮೂಹದ ಮೂರು ಪ್ರೌಢಶಾಲೆಗಳು ಉತ್ತಮ ಸಾಧನೆ ತೋರಿವೆ.

ವಿಶ್ವದರ್ಶನ ಆಂಗ್ಲ ಮಾಧ್ಯಮ ಪ್ರೌಢಶಾಲೆಯು ಶೇ.98.48 ಫಲಿತಾಂಶ ದಾಖಲಿಸಿದ್ದು, ಶಾಲೆಯ ವಿದ್ಯಾರ್ಥಿನಿ ಪ್ರಣತಿ ವಿ. ಮೆಣಸುಮನೆ 625ಕ್ಕೆ 620 ಅಂಕ ಗಳಿಸಿ ರಾಜ್ಯಕ್ಕೆ 6ನೇ ಸ್ಥಾನ ಹಾಗೂ ತಾಲೂಕಿಗೆ ದ್ವಿತೀಯ ಸ್ಥಾನ ಪಡೆದಿದ್ದಾಳೆ. ಅದೇ ರೀತಿ ಇಡಗುಂದಿಯ ವಿಶ್ವದರ್ಶನ ಕನ್ನಡ ಮಾಧ್ಯಮ ಪ್ರೌಢಶಾಲೆಯಲ್ಲಿ ಪರೀಕ್ಷೆಗೆ ಹಾಜರಾದ ಎಲ್ಲ ವಿದ್ಯಾರ್ಥಿಗಳೂ ಉತ್ತೀರ್ಣಗೊಂಡು ನೂರಕ್ಕೆ ನೂರು ಫಲಿತಾಂಶ ದಾಖಲಿಸಿ ಗಮನ ಸೆಳೆದಿದ್ದಾರೆ. ಪಟ್ಟಣದ ವಿಶ್ವದರ್ಶನ ಕನ್ನಡ ಮಾಧ್ಯಮ ಪ್ರೌಢಶಾಲೆಯುೂ ಕೂಡ ಉತ್ತಮ ಸಾಧನೆ ಮಾಡಿದ್ದು, ಶೇ.98.24 ಫಲಿತಾಂಶ ಪಡೆದಿದೆ.

ಇದನ್ನೂ ಓದಿ: Olive Oil Benefits: ಆಲಿವ್‌ ಎಣ್ಣೆ ಕೇವಲ ಅಡುಗೆಗಲ್ಲ, ಮುಖದ ಚರ್ಮ ಹಾಗೂ ಕೂದಲ ಸೌಂದರ್ಯಕ್ಕೂ ಬೇಕು!

ಈ ಕುರಿತು ಸಂಸ್ಥೆಯ ಅಧ್ಯಕ್ಷ ಹರಿಪ್ರಕಾಶ್‌ ಕೋಣೆಮನೆ ಅವರು ಸಂತಸ ವ್ಯಕ್ತಪಡಿಸಿದ್ದು, ಎಲ್ಲ ವಿದ್ಯಾರ್ಥಿಗಳಿಗೆ ಶುಭ ಹಾರೈಸಿದ್ದಾರೆ. ವಿಶ್ವದರ್ಶನ ಶಿಕ್ಷಣ ಸಮೂಹವು ನಿರಂತರವಾಗಿ ಗುಣಾತ್ಮಕ ಶಿಕ್ಷಣ ನೀಡುವಲ್ಲಿ ಮುಂಚೂಣಿಯಲ್ಲಿ ಸಾಗುತ್ತಿದೆ. ನಮ್ಮ ಶಿಕ್ಷಣ ಸಂಸ್ಥೆಯಲ್ಲಿ ಉತ್ತಮವಾದ ಪದವಿಪೂರ್ವ ಕಾಲೇಜು ಇದ್ದು, ಇಲ್ಲಿ ವಿಜ್ಞಾನ ಮತ್ತು ವಾಣಿಜ್ಯ ವಿಭಾಗದಲ್ಲಿ ಗುಣಮಟ್ಟದ ಶಿಕ್ಷಣ ಪಡೆಯಬಹುದಾಗಿದೆ. ಹತ್ತನೇ ತರಗತಿ ಪೂರ್ಣಗೊಳಿಸಿದ ವಿದ್ಯಾರ್ಥಿಗಳು ಸ್ವಂತ ಊರಿನಲ್ಲಿಯೇ ಮುಂದಿನ ಶಿಕ್ಷಣಕ್ಕಾಗಿ ಇದರ ಸದುಪಯೋಗವನ್ನು ಪಡೆದುಕೊಳ್ಳಬಹುದು ಎಂದು ತಿಳಿಸಿದ್ದಾರೆ.

ವಿಶ್ವದರ್ಶನ ಆಂಗ್ಲ ಮಾಧ್ಯಮ ಪ್ರೌಢಶಾಲೆ: ಶೇ.98.48 ಫಲಿತಾಂಶ

ಪ್ರಣತಿ ವಿ. ಮೆಣಸುಮನೆ 625ಕ್ಕೆ 620 ಅಂಕ ಗಳಿಸಿ ಶೇ. 99.20 ಫಲಿತಾಂಶದೊಂದಿಗೆ ರಾಜ್ಯಕ್ಕೆ 6ನೇ ಸ್ಥಾನ, ಶಾಲೆಗೆ ಪ್ರಥಮ ಸ್ಥಾನ, ಸಿಂಚನಾ ಎಸ್. ಭಟ್ಟ 615 ಅಂಕ ಗಳಿಸಿ ಶೇ.98.40 ಫಲಿತಾಂಶದೊಂದಿಗೆ ದ್ವಿತೀಯ ಸ್ಥಾನ, ತೇಜಸ್ ಎಸ್. ಹೆಗಡೆ 609 ಅಂಕ ಗಳಿಸಿ ಶೇ.97.44 ಫಲಿತಾಂಶದೊಂದಿಗೆ ತೃತೀಯ ಸ್ಥಾನ ಗಳಿಸಿದ್ದಾರೆ. ಪರೀಕ್ಷೆಗೆ ಹಾಜರಾದ ಒಟ್ಟು 66 ವಿದ್ಯಾರ್ಥಿಗಳಲ್ಲಿ 33 ಡಿಸ್ಟಿಂಕ್ಷನ್‌ನಲ್ಲಿ, 28 ವಿದ್ಯಾರ್ಥಿಗಳು ಪ್ರಥಮ ದರ್ಜೆ, 4 ವಿದ್ಯಾರ್ಥಿಗಳು ದ್ವಿತೀಯ ದರ್ಜೆಯಲ್ಲಿ ಉತ್ತೀರ್ಣರಾಗಿದ್ದಾರೆ.

ವಿಶ್ವದರ್ಶನ ಪ್ರೌಢಶಾಲೆ ಇಡಗುಂದಿ: ಶೇ. 100% ಫಲಿತಾಂಶ ಸಾಧನೆ

ತಾಲೂಕಿನ ಇಡಗುಂದಿಯಲ್ಲಿರುವ ವಿಶ್ವದರ್ಶನ ಪ್ರೌಢಶಾಲೆಯು ಎಂಟನೇ ಬಾರಿಗೆ ನೂರಕ್ಕೆ ನೂರು ಸಾಧನೆ ಮಾಡಿದೆ. ಪರೀಕ್ಷೆಗೆ ಕುಳಿತ 35 ವಿದ್ಯಾರ್ಥಿಗಳಲ್ಲಿ 9 ವಿದ್ಯಾರ್ಥಿಗಳು ಡಿಸ್ಟಿಂಕ್ಷನ್, 22 ವಿದ್ಯಾರ್ಥಿಗಳು ಪ್ರಥಮ ದರ್ಜೆಯಲ್ಲಿ ಹಾಗೂ 3 ವಿದ್ಯಾರ್ಥಿಗಳು ದ್ವಿತೀಯ ದರ್ಜೆಯಲ್ಲಿ ಉತ್ತೀರ್ಣರಾಗಿದ್ದಾರೆ.
ಗಣೇಶ ಶಾಂತಾರಾಮ ದೇಸಾಯಿ 587 (93.92%) ಪ್ರಥಮ ಸ್ಥಾನ, ನಂದಿತಾ ಮಹೇಶ ತಾಮ್ಸೆ 583 (93.28%) ದ್ವಿತೀಯ ಸ್ಥಾನ ಹಾಗೂ ಸುಬ್ರಹ್ಮಣ್ಯ ನಾರಾಯಣ ಭಟ್ಟ 571 (91.36%) ತೃತೀಯ ಸ್ಥಾನವನ್ನು ಗಳಿಸಿದ್ದಾರೆ.

ವಿಶ್ವದರ್ಶನ ಕನ್ನಡ ಮಾಧ್ಯಮ ಪ್ರೌಢಶಾಲೆ, ಯಲ್ಲಾಪುರ: ಶೇ. 98.24 ಫಲಿತಾಂಶ

ಅನನ್ಯ ನಾಗೇಶ ಹೆಗಡೆ 579 ಅಂಕ ಗಳಿಸಿ ಪ್ರಥಮ ಸ್ಥಾನ, ವೇದಶ್ರೀ ವೆಂಕಟರಮಣ ಭಟ್ಟ 570 ಅಂಕ ಗಳಿಸಿ ದ್ವಿತೀಯ ಸ್ಥಾನ, ಪವನ್ ಚಂದ್ರಕಾಂತ ಮರಾಠಿ 563 ಅಂಕ ಗಳಿಸಿ ತೃತೀಯ ಸ್ಥಾನ ಪಡೆದಿದ್ದಾರೆ.

ಇದನ್ನೂ ಓದಿ: Sensex Crash : ಷೇರು ಮಾರುಕಟ್ಟೆಯಲ್ಲಿ ಭಾರೀ ಕುಸಿತ, ಸೆನ್ಸೆಕ್ಸ್​ 1100 ಅಂಕಗಳಷ್ಟು ಪತನ

ಒಟ್ಟು 57 ವಿದ್ಯಾರ್ಥಿಗಳಲ್ಲಿ 10 ವಿಧ್ಯಾರ್ಥಿಗಳು ಡಿಸ್ಟಿಂಕ್ಷನ್ 33 ವಿಧ್ಯಾರ್ಥಿಗಳು ಪ್ರಥಮ ದರ್ಜೆಯಲ್ಲಿ, 10 ವಿದ್ಯಾರ್ಥಿಗಳು ದ್ವಿತೀಯ ದರ್ಜೆಯಲ್ಲಿ 3 ವಿದ್ಯಾರ್ಥಿಗಳು ತೃತೀಯ ದರ್ಜೆಯಲ್ಲಿ ಉತ್ತೀರ್ಣರಾಗಿದ್ದಾರೆ.

Continue Reading

ಮಳೆ

Karnataka Weather : ಕೊಡಗು, ಕೊಪ್ಪಳ ಸೇರಿ ಹಲವೆಡೆ ಅಬ್ಬರಿಸುತ್ತಿರುವ ಗಾಳಿ- ಮಳೆ; ನಾಳೆಗೂ ವಾರ್ನಿಂಗ್‌

Karnataka Weather Forecast : ವಿವಿಧೆಡೆ ಭಾರಿ ಗಾಳಿ-ಮಳೆಗೆ (Rain News) ಅನಾಹುತಗಳು ಸಂಭವಿಸಿದೆ. ಮಡಿಕೇರಿಯಲ್ಲಿ ಮಳೆ-ಗಾಳಿಗೆ ಕಾರಿನ ಮೇಲೆ ಮರ ಬಿದ್ದು ಜಖಂಗೊಂಡಿದೆ. ಶುಕ್ರವಾರವು ಗುಡುಗು ಸಹಿತ ಮಳೆಯಾಗುವ ಎಚ್ಚರಿಕೆಯನ್ನು ಹವಾಮಾನ ಇಲಾಖೆ ನೀಡಿದೆ. ಇತ್ತ ಮಳೆಗಾಗಿ ಮಕ್ಕಳಿಗೆ ಮದುವೆ ಮಾಡಿಸಿದ ಪ್ರಸಂಗವು ನಡೆದಿದೆ.

VISTARANEWS.COM


on

By

karnataka weather Forecast
Koo

ಕೊಡಗು/ಕೊಪ್ಪಳ/ಬೆಂಗಳೂರು: ರಾಜ್ಯದ ಹಲವೆಡೆ ಗಾಳಿ ಸಹಿತ ಮಳೆಯು (Rain News) ಅಬ್ಬರಿಸುತ್ತಿದೆ. ಗುರುವಾರದಂದು ಕೊಡಗು‌ ಜಿಲ್ಲೆಯ ವಿವಿಧೆಡೆ ಗುಡುಗು ಸಹಿತ (Karnataka Weather Forecast) ಮಳೆಯಾಗಿದೆ. ಕಳೆದೆರಡು ದಿನಗಳಿಂದ ಸಂಜೆಯಾಗುತ್ತಿದ್ದಂತೆ ಮಳೆಯ ಸಿಂಚನವಾಗುತ್ತಿದೆ. ಮುಂಜಾನೆ ಮೋಡ‌ ಕವಿದ ವಾತಾವರಣವಿದ್ದು, ಸಂಜೆ‌ ಅಬ್ಬರದೊಂದಿಗೆ ಮಳೆ ಸುರಿಯುತ್ತಿದೆ. ಮಳೆಯಿಂದ ಕೊಡಗಿನ‌ ರೈತರು ಹಾಗೂ ಸಾರ್ವಜನಿಕರ ಮೊಗದಲ್ಲಿ ಮಂದಹಾಸ ಮೂಡಿದೆ. ಮಡಿಕೇರಿ ಸಮೀಪ ನಿಲ್ಲಿಸಿದ್ದ ಕಾರಿನ ಮೇಲೆ ಭಾರಿ ಗಾಳಿ‌ಗೆ ಮರವು ಧರೆಗುರುಳಿದೆ. ಮಡಿಕೇರಿಯ ಸುದರ್ಶನ ಅಥಿತಿಗೃಹದ ಬಳಿ ಘಟನೆ ನಡೆದಿದೆ. ಅದೃಷ್ಟವಶಾತ್‌ ಕಾರಿನೊಳಗೆ ಯಾರು ಇರಲಿಲ್ಲ.

ಇತ್ತ ಕೊಪ್ಪಳ ಜಿಲ್ಲೆಯ ಕೆಲವೆಡೆ ಮಳೆಯಾಗಿದೆ. ಬಿಸಿಲನಿಂದ ಕಂಗೆಟ್ಟ ಜನರಿಗೆ ಗಾಳಿ ಸಹಿತ ಮಳೆಯು ಅಬ್ಬರಿಸಿದೆ. ಕೊಪ್ಪಳ ಜಿಲ್ಲೆ ಕಾರಟಗಿ ತಾಲೂಕಿನಲ್ಲಿ ಜೋರಾಗಿ ಮಳೆಯಾಗಿದೆ. ಬೆಂಗಳೂರಿನ ದೇವನಹಳ್ಳಿಯಲ್ಲಿರುವ ಏರ್‌ಪೋರ್ಟ್‌ನಲ್ಲೂ ಉತ್ತಮ ಮಳೆಯಾಗಿದೆ. ಬೆಳಗ್ಗೆನಿಂದ ಬಿಸಿಲಿಗೆ ಕಂಗೆಟ್ಟಿದ್ದ ಏರ್‌ಪೋರ್ಟ್‌ ಪ್ರಯಾಣಿಕರು, ಟ್ಯಾಕ್ಸಿ ಚಾಲಕರು ಮಳೆ ಆಗಮನದಿಂದ ಖುಷಿಯಾದರು. ಮಳೆಗೆ ವಾತಾವರಣವು ಕೂಲ್‌ ಆಗಿತ್ತು.

ವಿಜಯನಗರದಲ್ಲಿ ಮಳೆಗೆ ಉರುಳಿದ ಬಾಳೆ ಬೆಳೆ

ಹಂಪಿ ಪರಿಸರದಲ್ಲಿ ಸುರಿದ ಮಳೆಗೆ ಬಾಳೆ ಬೆಳೆ ಉರುಳಿದ ಘಟನೆ ವಿಜಯನಗರ ಜಿಲ್ಲೆಯ ಹೊಸಪೇಟೆ ತಾಲೂಕಿನ ವೆಂಕಟಾಪುರ ಗ್ರಾಮದಲ್ಲಿ ನಡೆದಿದೆ. ಗಾಳಿ, ಮಳೆಗೆ ಸಾವಿರಾರು ಬಾಳೆಗಿಡಗಳು ನೆಲಕ್ಕುರುಳಿವೆ. ರೈತಾಪಿ ವರ್ಗ ವರ್ಷದ ಮೊದಲ ದೊಡ್ಡ ಮಳೆ ಎಂದೇ ಕೊಂಡಾಡಿದ್ದಾರೆ. ವೆಂಕಟಾಪುರ ಮಾಗಣೆ, ನಿಂಬಾಪುರ, ಬುಕ್ಕಸಾಗರ ಮಾಗಣೆ ಗ್ರಾಮಗಳಲ್ಲಿ ಬಾಳೆ ಬೆಳೆ ನೆಲಕ್ಕೆ ಬಿದ್ದಿದೆ.

ರೈತರು ಹೆಚ್ಚಾಗಿ ಸುಗಂದಿ, ಏಲಕ್ಕಿ, ಸಕ್ಕರೆ ಬಾಳೆಯನ್ನು ಬೆಳೆದಿದ್ದರು. ವೆಂಕಟಾಪುರ ಮಾಗಣೆಯಲ್ಲಿ ಗ್ರಾಮದಲ್ಲಿ ಬಾಳೆಗಿಡಗಳಿಗೆ ಹೆಚ್ಚಿನ ಹಾನಿಯಾಗಿದೆ. ಎಕರೆಗೆ 900 ಗಿಡಗಳು ನೆಟ್ಟಿದರೆ ಕೆಲವೆಡೆ 300 ರಿಂದ 400 ಬಾಳೆ ಗಿಡ ನೆಲಸಮವಾಗಿವೆ. ಕೆಲವೆಡೆ ಎಕೆರೆಗಟ್ಟಲೇ ಗಿಡಗಳು ನೆಲಕ್ಕುರುಳಿವೆ ಎಂದು ಕೃಷಿ ಅಧಿಕಾರಿಗಳು ಮಾಹಿತಿ ನೀಡಿದ್ದಾರೆ. ಬಾಳೆ ಬೆಳೆ ಹಾನಿಗೊಳಗಾದ ರೈತರಿಗೆ ಸೂಕ್ತ ಪರಿಹಾರದ ಭರವಸೆಯನ್ನು ಜಿಲ್ಲಾಡಳಿತ ನೀಡಿದೆ. ಇನ್ನೂ ಹಲವು ತಿಂಗಳಿಂದ ತುರ್ತಾ, ಬಸವಣ್ಣ, ರಾಯ ಕಾಲುವೆಗಳಲ್ಲಿ ನೀರಿಲ್ಲದೇ ಬರಿದಾಗಿತ್ತು. ಇದೀಗ ಮಳೆಗೆ ಕಾಲುವೆಗಳಲ್ಲೂ ನೀರು ಹರಿದಿದ್ದು, ರೈತರಲ್ಲೂ ಕೊಂಚ ಸಂತಸಗೊಂಡಿದ್ದಾರೆ.

ತುಮಕೂರಲ್ಲಿ ಮಳೆಗಾಗಿ ಮಕ್ಕಳಿಗೆ ಮದುವೆ

ಕೆಲವೆಡೆ ಮಳೆಯು ಅಬ್ಬರಿಸುತ್ತಿದ್ದರೆ ಇತ್ತ ಮಳೆಗಾಗಿ ವಿಶೇಷ ಪೂಜೆ-ಪುನಸ್ಕಾರಗಳು ನಡೆಯುತ್ತಿವೆ. ಮಳೆಗಾಗಿ ತುಮಕೂರಿನಲ್ಲಿ ವಿಶೇಷ ಪ್ರಾರ್ಥನೆ ಸಲ್ಲಿಸಲಾಗಿದೆ. ತೀವ್ರ ಬರ ಹಿನ್ನೆಲೆಯಲ್ಲಿ ಬೆಳದಿಂಗಳು ಹಬ್ಬ ಆಚರಣೆ ಮಾಡಿ ಮಳೆಗಾಗಿ ಪ್ರಾರ್ಥಿಸಿದ್ದಾರೆ. ಚಿಕ್ಕ ಮಕ್ಕಳಿಗೆ ವಧು-ವರರಂತೆ ಸಿಂಗಾರಿಸಿ, ಅಲಂಕಾರಿಸಿ ಮದುವೆ ಮಾಡಿ ವಿಶೇಷ ಆಚರಣೆ ಮಾಡಿದ್ದಾರೆ. ತುಮಕೂರಿನ ಜಯಪುರ ಬಡಾವಣೆಯಲ್ಲಿ ಘಟನೆ ನಡೆದಿದೆ. ಮಳೆಗಾಗಿ ಜನರು ಹಲವು ಆಚರಣೆಗಳ ಮೊರೆ ಹೋಗಿದ್ದಾರೆ.

ಇದನ್ನೂ ಓದಿ: SSLC Result 2024: ಪಾಸ್ ಆಗಿದ್ದರೂ ಫೇಲ್ ಎಂದು ತಿಳಿದು ನೇಣಿಗೆ ಶರಣಾದ ಎಸ್‌ಎಸ್‌ಎಲ್‌ಸಿ ವಿದ್ಯಾರ್ಥಿನಿ

ಭಾರಿ ಮಳೆಯೊಂದಿಗೆ ರಭಸವಾಗಿ ಬೀಸಲಿದೆ ಗಾಳಿ

ಮೇ 10ರಂದು ದಕ್ಷಿಣ ಒಳನಾಡಿನ ಚಾಮರಾಜನಗರ, ಮೈಸೂರು, ಮಂಡ್ಯ, ಕೋಲಾರ, ಹಾಸನ, ಬೆಂಗಳೂರು ನಗರ ಮತ್ತು ಬೆಂಗಳೂರು ಗ್ರಾಮಾಂತರ ಗುಡುಗು ಸಹಿತ ಭಾರಿ ಮಳೆಯಾಗಲಿದೆ. ಕೆಲವು ಸ್ಥಳಗಳಲ್ಲಿ ಗಾಳಿಯು 40-50 ಕಿ.ಮೀ ವೇಗದಲ್ಲಿ ಬೀಸಲಿದೆ.

ಮಲೆನಾಡಿನ ಚಿಕ್ಕಮಗಳೂರು, ಹಾಸನ, ಕೊಡಗು ಮತ್ತು ದಕ್ಷಿಣ ಒಳನಾಡಿನಲ್ಲಿ ತುಮಕೂರು ಜಿಲ್ಲೆಗಳಲ್ಲಿ ಕೆಲವು ಸ್ಥಳಗಳಲ್ಲಿ ಗಾಳಿಯೊಂದಿಗೆ (40-50 kmph) ಸಾಧಾರಣ ಮಳೆಯಾಗುವ ಸಾಧ್ಯತೆಯಿದೆ. ಜತೆಗೆ ಬಳ್ಳಾರಿ, ಚಿಕ್ಕಬಳ್ಳಾಪುರ, ಚಿತ್ರದುರ್ಗ, ದಾವಣಗೆರೆ, ರಾಮನಗರ, ಶಿವಮೊಗ್ಗ ಮತ್ತು ವಿಜಯನಗರ ಜಿಲ್ಲೆಗಳಲ್ಲಿ ಗುಡುಗು ಸಹಿತ ಹಗುರದಿಂದ ಸಾಧಾರಣ ಮಳೆಯಾಗುವ ಸಾಧ್ಯತೆಯಿದೆ.

ಬೀದರ್, ಕಲಬುರಗಿ, ಯಾದಗಿರಿ, ಕೊಪ್ಪಳ ಜಿಲ್ಲೆಗಳಲ್ಲಿ ಕೆಲವೆಡೆ ಬಿರುಸಿನ ಗಾಳಿಯೊಂದಿಗೆ ಗುಡುಗು ಸಹಿತ ಮಧ್ಯಮ ಮಳೆಯಾಗಲಿದೆ. ರಾಯಚೂರು, ಕೊಪ್ಪಳ, ಬಾಗಲಕೋಟೆ, ವಿಜಯಪುರದಲ್ಲೂ ಉತ್ತಮ ಮಳೆಯಾಗುವ ನಿರೀಕ್ಷೆ ಇದೆ. ದಕ್ಷಿಣ ಕನ್ನಡ ಜಿಲ್ಲೆಯ ಕೆಲವು ಸ್ಥಳಗಳಲ್ಲಿ ಹಗುರದಿಂದ ಸಾಧಾರಣ ಮಳೆಯಾಗುವ ಸಾಧ್ಯತೆಯಿದೆ. ರಾಜ್ಯಾದ್ಯಂತ ಮುಂದಿನ 24 ಗಂಟೆಯಲ್ಲಿ ಗರಿಷ್ಠ ತಾಪಮಾನವು 2-4 ಡಿ.ಸೆ ಕಡಿಮೆಯಾಗುವ ಸಾಧ್ಯತೆ ಇದೆ.

ಇನ್ನೂ ರಾಜಧಾನಿ ಬೆಂಗಳೂರಿನಲ್ಲಿ ಸಾಮಾನ್ಯವಾಗಿ ಮೋಡ ಕವಿದ ವಾತಾವರಣ ಇರಲಿದೆ. ಕೆಲವು ಪ್ರದೇಶಗಳಲ್ಲಿ ಸಂಜೆ ಅಥವಾ ರಾತ್ರಿಗೆ ಗುಡುಗು ಸಹಿತ ಮಳೆಯಾಗಲಿದೆ. ಗರಿಷ್ಠ ಹಾಗೂ ಕನಿಷ್ಠ ಉಷ್ಣಾಂಶವು ಕ್ರಮವಾಗಿ 34-22 ಡಿ.ಸೆ ಇರಲಿದೆ.

ಈ ಸಂಗತಿಯ ಕುರಿತು ನಿಮ್ಮ ಅನಿಸಿಕೆ ಏನು? ಕಾಮೆಂಟ್ ಮೂಲಕ ತಿಳಿಸಿ

Continue Reading

ಕರ್ನಾಟಕ

SSLC Result 2024: ಎಸ್‌ಎಸ್‌ಎಲ್‌ಸಿ 2, 3ನೇ ಪರೀಕ್ಷೆ ಬರೆಯುವವರಿಗೆ ಗುಡ್‌ ನ್ಯೂಸ್‌! ಇರಲಿದೆ ಸ್ಪೆಷಲ್‌ ಕ್ಲಾಸ್‌

SSLC Result 2024: ಈ ಬಾರಿ ಎಸ್‌ಎಸ್‌ಎಲ್‌ಸಿಯಲ್ಲಿ ನಿರೀಕ್ಷಿತ ಪ್ರಮಾಣದಲ್ಲಿ ಫಲಿತಾಂಶ ಬಂದಿಲ್ಲ. ಕೆಲವು ಕಟ್ಟುನಿಟ್ಟಿನ ಕ್ರಮದಿಂದಾಗಿ ಭಾರಿ ಇಳಿಕೆ ಕಂಡಿದೆ. ಈ ಹಿನ್ನೆಲೆಯಲ್ಲಿ ಶೇಕಡಾ 20ರಷ್ಟು ಗರೇಸ್‌ ಮಾರ್ಕ್ಸ್‌ ಅನ್ನು ಕೊಟ್ಟು ಪಾಸ್‌ ಮಾಡಲಾಗಿತ್ತು. ಮುಂದೆ ಬರುವ 2, 3ನೇ ಪರೀಕ್ಷೆಯಲ್ಲಿ ಹೆಚ್ಚಿನ ಅಂಕಗಳನ್ನು ವಿದ್ಯಾರ್ಥಿಗಳು ತೆಗೆದುಕೊಳ್ಳುವ ನಿಟ್ಟಿನಲ್ಲಿ ಶಿಕ್ಷಣ ಇಲಾಖೆಯು ಕ್ರಮವನ್ನು ತೆಗೆದುಕೊಂಡಿದೆ. ಅಂಥ ಮಕ್ಕಳಿಗೆ ಮುಂದಿನ ಒಂದು ತಿಂಗಳಲ್ಲಿ “ಪರಿಹಾರ ಬೋಧನೆ” ಮಾಡಲು ವ್ಯವಸ್ಥೆ ಮಾಡಲಾಗುತ್ತಿದೆ.

VISTARANEWS.COM


on

SSLC Result 2024 SSLC 2nd and 3rd exam aspirants to have special classes
Koo

ಬೆಂಗಳೂರು: 2023-24ನೇ ಸಾಲಿನ ಎಸ್‌ಎಸ್‌ಎಲ್‌ಸಿ ಪರೀಕ್ಷೆ-1ರ (SSLC Result 2024) ಫಲಿತಾಂಶವನ್ನು ಗುರುವಾರ (ಮೇ 9) ಕರ್ನಾಟಕ ಶಾಲಾ ಪರೀಕ್ಷೆ ಮತ್ತು ಮೌಲ್ಯ ನಿರ್ಣಯ ಮಂಡಳಿ ಪ್ರಕಟಿಸಿದೆ. ಆದರೆ, ಕಳೆದ ವರ್ಷಕ್ಕೆ ಹೋಲಿಸಿದರೆ ಈ ವರ್ಷ ಫಲಿತಾಂಶ ಕುಸಿತ (SSLC Result 2024) ಕಂಡಿದೆ. ಅಲ್ಲದೆ, ಫಲಿತಾಂಶವನ್ನು ಸುಧಾರಣೆ ಮಾಡಿಕೊಳ್ಳುವವರು, ಅನುತ್ತೀರ್ಣ ಹೊಂದಿದವರ ಸಲುವಾಗಿ ವಿಶೇಷ ಬೋಧನೆ ವ್ಯವಸ್ಥೆಯನ್ನು ಮಾಡಲು ಶಿಕ್ಷಣ ಇಲಾಖೆ ಮುಂದಾಗಿದೆ.

ಅಂದರೆ ಈ ಬಾರಿ ನಿರೀಕ್ಷಿತ ಪ್ರಮಾಣದಲ್ಲಿ ಫಲಿತಾಂಶ ಬಂದಿಲ್ಲ. ಕೆಲವು ಕಟ್ಟುನಿಟ್ಟಿನ ಕ್ರಮದಿಂದಾಗಿ ಭಾರಿ ಇಳಿಕೆ ಕಂಡಿದೆ. ಈ ಹಿನ್ನೆಲೆಯಲ್ಲಿ ಶೇಕಡಾ 20ರಷ್ಟು ಗರೇಸ್‌ ಮಾರ್ಕ್ಸ್‌ ಅನ್ನು ಕೊಟ್ಟು ಪಾಸ್‌ ಮಾಡಲಾಗಿತ್ತು. ಮುಂದೆ ಬರುವ 2, 3ನೇ ಪರೀಕ್ಷೆಯಲ್ಲಿ ಹೆಚ್ಚಿನ ಅಂಕಗಳನ್ನು ವಿದ್ಯಾರ್ಥಿಗಳು ತೆಗೆದುಕೊಳ್ಳುವ ನಿಟ್ಟಿನಲ್ಲಿ ಶಿಕ್ಷಣ ಇಲಾಖೆಯು ಕ್ರಮವನ್ನು ತೆಗೆದುಕೊಂಡಿದೆ. ಅಂಥ ಮಕ್ಕಳಿಗೆ ಮುಂದಿನ ಒಂದು ತಿಂಗಳಲ್ಲಿ “ಪರಿಹಾರ ಬೋಧನೆ” ಮಾಡಲು ವ್ಯವಸ್ಥೆ ಮಾಡಲಾಗುತ್ತಿದೆ.

ಈ ಬಗ್ಗೆ ಶಿಕ್ಷಣ ಇಲಾಖೆ ಪ್ರಕಟಣೆ ಹೊರಡಿಸಿದ್ದು, ಪರಿಹಾರ ಕ್ರಮವಾಗಿ ಶಿಕ್ಷಣ ಇಲಾಖೆಯು ಪರೀಕ್ಷೆ-1 ರಲ್ಲಿ ಉತ್ತಮ ಸಾಧನೆ ಮಾಡದ ಅಥವಾ ತಮ್ಮ ಅಂಕಗಳನ್ನು ಉತ್ತಮ ಪಡಿಸಿಕೊಳ್ಳಲು ಬಯಸುವ ಎಲ್ಲ ವಿದ್ಯಾರ್ಥಿಗಳಿಗೆ ಮುಂದಿನ ಒಂದು ತಿಂಗಳಲ್ಲಿ ಪರಿಹಾರ ಬೋಧನೆಯನ್ನು ಆಯೋಜಿಸುತ್ತದೆ. ಇದರಿಂದ ವಿದ್ಯಾರ್ಥಿಗಳು ಪರೀಕ್ಷೆ-2 ಮತ್ತು ಪರೀಕ್ಷೆ-3ಕ್ಕೆ ಉತ್ತಮವಾಗಿ ಸಿದ್ಧರಾಗಲು ಸಾಧ್ಯವಾಗುತ್ತದೆ ಎಂದು ಹೇಳಿದೆ.

ಎಸ್‌ಎಸ್‌ಎಲ್‌ಸಿ ಮಕ್ಕಳಿಗೆ ಸಿಕ್ತು 20 ಪರ್ಸೆಂಟ್ ಗ್ರೇಸ್ ಮಾರ್ಕ್ಸ್‌! ಆದ್ರೂ ಫಲಿತಾಂಶ ತೀರಾ ಕಳಪೆ

ಶಿಕ್ಷಣ ಇಲಾಖೆ ಈ ಬಾರಿ ವಿದ್ಯಾರ್ಥಿಗಳಿಗೆ ಗುಡ್‌ ನ್ಯೂಸ್‌ ಕೊಟ್ಟಿದೆ. ಬರೋಬ್ಬರಿ 20 ಪರ್ಸೆಂಟ್ ಗ್ರೇಸ್ ಮಾರ್ಕ್ಸ್‌ ಅನ್ನು ಕೊಡಲಾಗಿದೆ.

ಫಲಿತಾಂಶ ಹೆಚ್ಚಿಸಲು ಶಿಕ್ಷಣ ಇಲಾಖೆ ಸರ್ಕಸ್ ಮಾಡಿದ್ದು, ಶೇಕಡಾ 20 ಗ್ರೇಸ್ ಮಾರ್ಕ್ಸ್‌ ಕೊಟ್ಟರೂ ಕಡಿಮೆ ಫಲಿತಾಂಶ ದಾಖಲಾಗಿದೆ. ವಿದ್ಯಾರ್ಥಿ ಹಿತದೃಷ್ಟಿಯಿಂದ ಗ್ರೇಸ್‌ ಮಾರ್ಕ್ಸ್‌ ನೀಡಿದೆ ಎನ್ನಲಾಗಿದೆ. ಒಟ್ಟು 1 ಲಕ್ಷದ 70 ಸಾವಿರ ವಿದ್ಯಾರ್ಥಿಗಳಿಗೆ ಗ್ರೇಸ್ ಮಾರ್ಕ್ಸ್‌ ಸಿಕ್ಕಿದೆ.

ವೆಬ್‌ ಕಾಸ್ಟಿಂಗ್‌ನಲ್ಲಿ ನಡೆದ ಪರೀಕ್ಷೆ

ಪ್ರಪ್ರಥಮ ಬಾರಿಗೆ ಎಲ್ಲ ಪರೀಕ್ಷಾ ಕೇಂದ್ರಗಳಲ್ಲಿ ಸಿಸಿಟಿವಿಗಳ ಮೂಲಕ ವೆಬ್ ಕಾಸ್ಟಿಂಗ್ ಮಾಡುವ ಹೊಸ ಪದ್ಧತಿಯನ್ನು ಪರಿಚಯಿಸಲಾಗಿದೆ. ಪರೀಕ್ಷಾ ಕೊಠಡಿಗಳ ದೃಶ್ಯಾವಳಿಗಳನ್ನು ಮೇಲ್ವಿಚಾರಣೆ ಮಾಡಲು ಎಲ್ಲ ಜಿಲ್ಲೆಗಳಲ್ಲಿ ನಿಯಂತ್ರಣ ಕೊಠಡಿಗಳನ್ನು ಸ್ಥಾಪಿಸಲಾಗಿತ್ತು. ಆದರೆ, ಒಟ್ಟಾರೆ ಫಲಿತಾಂಶ ಕಳೆದ ವರ್ಷಕ್ಕಿಂತ ಶೇ. 30ರಷ್ಟು ಕಡಿಮೆಯಾಗಿದೆ. ಮೊದಲ ಬಾರಿಗೆ ವೆಬ್‌ ಕಾಸ್ಟಿಂಗ್ ವಿಧಾನವನ್ನು ಪರಿಚಯಿಸಿದ್ದರಿಂದ ವಿದ್ಯಾರ್ಥಿಗಳ ಹಿತದೃಷ್ಟಿಯಿಂದ ಕಡಿಮೆಯಾಗಿರುವ ಫಲಿತಾಂಶವನ್ನು ಉತ್ತಮ ಪಡಿಸಲು ಸರ್ಕಾರ ನಿರ್ಧರಿಸಿದೆ.

ಈ ಹಿನ್ನೆಲೆಯಲ್ಲಿ, ಒಂದು ಬಾರಿಯ ಕ್ರಮವಾಗಿ, 2024ರ ಎಲ್ಲ 3 ಎಸ್ಎಸ್‌ಎಲ್‌ಸಿ ಪರೀಕ್ಷೆಗಳಿಗೆ ಎಲ್ಲ ವಿಷಯಗಳಲ್ಲಿ ನೀಡುವ ಕೃಪಾಂಕಗಳನ್ನು ಆಕರ್ಷಿಸಲು ಪಡೆಯಬೇಕಾದ ಅರ್ಹ ಅಂಕಗಳನ್ನು ಶೇ. 35 ರಿಂದ ಶೇ. 25ಕ್ಕೆ ಇಳಿಸಲಾಗಿದೆ ಮತ್ತು ಕೃಪಾಂಕದ ಪ್ರಮಾಣವನ್ನು ಶೇ. 10 ರಿಂದ ಶೇ. 20ಕ್ಕೆ ಹೆಚ್ಚಿಸಲಾಗಿದೆ. ಈ ಕ್ರಮದ ನಂತರ ಒಟ್ಟಾರೆ ಫಲಿತಾಂಶವು, ಮೇಲಿನ ಕೋಷ್ಟಕದಲ್ಲಿನಂತೆ, 73.40% ಆಗಿದೆ. ಮುಂಬರುವ ವರ್ಷಗಳಲ್ಲಿ ಶಿಕ್ಷಕರು ಮತ್ತು ವಿದ್ಯಾರ್ಥಿಗಳು ನೂತನ ವ್ಯವಸ್ಥೆಗೆ ಉತ್ತಮವಾಗಿ ಹೊಂದಿಕೊಳ್ಳುವುದರಿಂದ ಫಲಿತಾಂಶ ವೃದ್ಧಿಯ ಅಗತ್ಯವಿರುವುದಿಲ್ಲ ಎಂದು ಶಿಕ್ಷಣ ಇಲಾಖೆ ಅಭಿಪ್ರಾಯಪಟ್ಟಿದೆ.

ಫಸ್ಟ್‌ ಬೆಂಚ್‌ಗೆ ಬಂದ ಉಡುಪಿ; ಲಾಸ್ಟ್‌ ಬೆಂಚ್‌ನಲ್ಲೇ ಉಳಿದ ಯಾದಗಿರಿ!

ಕಳೆದ ವರ್ಷಕ್ಕೆ ಹೋಲಿಸಿದರೆ ಈ ವರ್ಷ ಫಲಿತಾಂಶ ಕುಸಿತ (SSLC Result 2024) ಕಂಡಿದೆ. 2022-23ರಲ್ಲಿ 83.89% ಇದ್ದರೆ, ಈ ಬಾರಿ 73.40% ಮಂದಿ ಪಾಸ್, ಶೇಕಡಾ 10.49% ರಷ್ಟು ಫಲಿತಾಂಶ ಕುಸಿತವಾಗಿದೆ. ಕಳೆದ ವರ್ಷ ಮೊದಲ ಸ್ಥಾನವನ್ನು ಚಿತ್ರದುರ್ಗ, ಎರಡನೇ ಸ್ಥಾನವನ್ನು ಮಂಡ್ಯ , ಮೂರನೇ ಸ್ಥಾನವನ್ನು ಹಾಸನ ಹಾಗೂ ಕೊನೆ ಸ್ಥಾನವನ್ನು ಯಾದಗಿರಿ ಪಡೆದಿತ್ತು. ಈ ವರ್ಷವೂ ಫಲಿತಾಂಶದಲ್ಲಿ ಯಾದಗಿರಿಯು ಕೊನೆ ಸ್ಥಾನವನ್ನೇ ಗಳಿಸಿದ್ದು, ಶೇಕಡಾವಾರು 50.59ರಷ್ಟು ಫಲಿತಾಂಶ ಬಂದಿದೆ. ಇನ್ನೂ ಉಡುಪಿ ಜಿಲ್ಲೆ ಕಳೆದ ಬಾರಿ 14ಕ್ಕೆ ಸ್ಥಾನದಲ್ಲಿತ್ತು, ಆದರೆ, ಈ ಬಾರಿ ಶೇ.94ರಷ್ಟು ಫಲಿತಾಂಶದೊಂದಿಗೆ ಮೊದಲ ಸ್ಥಾನವನ್ನು ಗಳಿಸಿದೆ. ದಕ್ಷಿಣ ಕನ್ನಡ ಎರಡನೇ ಹಾಗೂ ಶಿವಮೊಗ್ಗ ಮೂರನೇ ಸ್ಥಾನ ಗಳಿಸಿದೆ.

ಜಿಲ್ಲೆಗಳ ಶೇಕಡಾವಾರು ಫಲಿತಾಂಶ ಇಂತಿದೆ

1) ಉಡುಪಿ- 94%
2) ದಕ್ಷಿಣ ಕನ್ನಡ-92.12%
3) ಶಿವಮೊಗ್ಗ -88.67%
4) ಕೊಡಗು- 88.67%
5) ಉತ್ತರ ಕನ್ನಡ-86.54%
6) ಹಾಸನ-86.28%
7) ಮೈಸೂರು-85.5%
8) ಶಿರಸಿ-84.64%
9)ಬೆಂಗಳೂರು ಗ್ರಾಮಾಂತರ-83.67%
10) ಚಿಕ್ಕಮಗಳೂರು-83.39%
11) ವಿಜಯಪುರ- 79.82%
12) ಬೆಂಗಳೂರು ದಕ್ಷಿಣ-79%
13) ಬಾಗಲಕೋಟೆ-77.92%
14)ಬೆಂಗಳೂರು ಉತ್ತರ- 77.09%
15) ಹಾವೇರಿ-75.85%
16) ತುಮಕೂರು-75.16%
17)ಗದಗ- 74.76%
18)ಚಿಕ್ಕಬಳ್ಳಾಪುರ- 73.61%
19)ಮಂಡ್ಯ-73.59%
20) ಕೋಲಾರ-73.57%
21)ಚಿತ್ರದುರ್ಗ-72.85%
22) ಧಾರವಾಡ-72.67%
23) ದಾವಣಗೆರೆ- 72.48%
24) ಚಾಮರಾಜನಗರ-71.59%
25) ಚಿಕ್ಕೋಡಿ-69.82%
26) ರಾಮನಗರ-69.53%
27) ವಿಜಯನಗರ-65.61%
28) ಬಳ್ಳಾರಿ-64.99%
29) ಬೆಳಗಾವಿ-64.93%
30) ಮಧುಗಿರಿ-62.44%
31) ರಾಯಚೂರು- 61.2%
32) ಕೊಪ್ಪಳ- 61.16%
33) ಬೀದರ್‌- 57.52%
34) ಕಲಬುರಗಿ- 53.04%
35) ಯಾದಗಿರಿ- 50.59%

ಮಾಧ್ಯಮವಾರು ಫಲಿತಾಂಶ

ಕನ್ನಡ – 69.34%
ಆಂಗ್ಲ – 88.29%
ಉರ್ದು – 63.49%
ಮರಾಠಿ – 69.32%
ತೆಲುಗು – 75.59%

ಇದನ್ನೂ ಓದಿ: SSLC Result 2024: ಎಸ್‌ಎಸ್‌ಎಲ್‌ಸಿ ಫಲಿತಾಂಶ ಪ್ರಕಟ; ಶೇ. 73.40 ವಿದ್ಯಾರ್ಥಿಗಳು ಪಾಸ್‌, ಉಡುಪಿ ಫಸ್ಟ್‌, ಯಾದಗಿರಿ ಲಾಸ್ಟ್‌

ಅತಿ ಹೆಚ್ಚು ಅಂಕ ಗಳಿಸಿದ ವಿದ್ಯಾರ್ಥಿಗಳ ವಿವರ

625ಕ್ಕೆ 625 ಅಂಕವನ್ನು ಒಬ್ಬ ವಿದ್ಯಾರ್ಥಿ ಮಾತ್ರ ಪಡೆದುಕೊಂಡಿದ್ದಾರೆ. 624 ಅಂಕಗಳನ್ನು 7 ಮಂದಿ, 623 ಅಂಕಗಳನ್ನು 14 ಮಂದಿ ಹಾಗೂ 622 ಅಂಕಗಳನ್ನು 21 ಮಂದಿ, 621 ಅಂಕಗಳನ್ನು 44 ಮಂದಿ, 620 ಅಂಕಗಳನ್ನು 64 ಮಂದಿ ಅಂಕಗಳನ್ನು ಪಡೆದಿದ್ದಾರೆ.

Continue Reading
Advertisement
Akshaya Tritiya Bala Rama Silver Idol gift from Sri Sai Gold Palace in bengaluru
ಬೆಂಗಳೂರು1 hour ago

Sri Sai Gold Palace: ಅಕ್ಷಯ ತೃತೀಯ; ಶ್ರೀ ಸಾಯಿ ಗೋಲ್ಡ್ ಪ್ಯಾಲೇಸ್‌ನಿಂದ ಶ್ರೀ ಬಾಲ ರಾಮನ ಬೆಳ್ಳಿ ವಿಗ್ರಹ ಉಡುಗೊರೆ

IPL 2024
ಪ್ರಮುಖ ಸುದ್ದಿ2 hours ago

IPL 2024 : ಆರ್​ಸಿಬಿಗೆ ಐದನೇ ವಿಜಯ, ಪಂಜಾಬ್​ ವಿರುದ್ಧ 60 ರನ್ ಭರ್ಜರಿ ಗೆಲುವು

Padma Awards 2024
ಪ್ರಮುಖ ಸುದ್ದಿ3 hours ago

Padma Awards 2024 : ವೈಜಯಂತಿಮಾಲಾ, ಚಿರಂಜೀವಿ ಸೇರಿದಂತೆ ಹಲವು ಗಣ್ಯರಿಗೆ ಪದ್ಮ ಪ್ರಶಸ್ತಿ ಪ್ರದಾನ

Prajwal Revanna Case
ಪ್ರಮುಖ ಸುದ್ದಿ4 hours ago

Prajwal Revanna Case : ಬಿಜೆಪಿ ಮುಖಂಡ ದೇವರಾಜೇಗೌಡ ವಿರುದ್ಧ ಲೈಂಗಿಕ ಕಿರುಕುಳ ಕೇಸ್​ ದಾಖಲು

Prajwal Revanna case Revanna bail plea to be heard on Monday Advocate Nagesh argument was as follows
ಕ್ರೈಂ4 hours ago

Prajwal Revanna Case: ರೇವಣ್ಣ ಜಾಮೀನು ಅರ್ಜಿ ಸೋಮವಾರಕ್ಕೆ: ಎಸ್‌ಐಟಿಗೆ ಹಿಗ್ಗಾಮುಗ್ಗಾ ತರಾಟೆ; ವಕೀಲ ನಾಗೇಶ್‌ ವಾದ ಹೀಗಿತ್ತು!

T20 World Cup 2024
ಪ್ರಮುಖ ಸುದ್ದಿ5 hours ago

T20 World Cup : ವಿಶ್ವ ಕಪ್​ಗೆ ತಂಡ ಪ್ರಕಟಿಸಿದ ಶ್ರೀಲಂಕಾ, ಸಿಎಸ್​​ಕೆ ಆಟಗಾರನಿಗೂ ಚಾನ್ಸ್​​

ಉತ್ತರ ಕನ್ನಡ5 hours ago

SSLC Result 2024: ಎಸ್‌ಎಸ್‌ಎಲ್‌ಸಿ ಪರೀಕ್ಷೆಯಲ್ಲಿ ಸಾರ್ವಭೌಮ ಗುರುಕುಲಕ್ಕೆ ಶೇ.100 ಫಲಿತಾಂಶ

Yallapur Vishwadarshana Group of institutions performed well in SSLC Result 2024
ಉತ್ತರ ಕನ್ನಡ5 hours ago

SSLC Result 2024: ಯಲ್ಲಾಪುರದ ವಿಶ್ವದರ್ಶನ ಶಿಕ್ಷಣ ಸಮೂಹ ಪ್ರೌಢಶಾಲೆಗಳ ಉತ್ತಮ ಸಾಧನೆ

women's Cricket team
ಕ್ರೀಡೆ5 hours ago

Womens Cricket Team : ಬಾಂಗ್ಲಾ ವಿರುದ್ಧ 5-0 ಕ್ಲೀನ್​ ಸ್ವೀಪ್ ಸಾಧನೆ ಮಾಡಿದ ಭಾರತದ ವನಿತೆಯರು

Mother passed SSLC exam with her son in Hassan
ಕರ್ನಾಟಕ5 hours ago

SSLC Result 2024: ಎಸ್‌ಎಸ್‌ಎಲ್‌ಸಿ ಪರೀಕ್ಷೆಯಲ್ಲಿ ಮಗನ ಜತೆ ತಾಯಿಯೂ ಪಾಸ್!

Sharmitha Gowda in bikini
ಕಿರುತೆರೆ7 months ago

Geetha Serial Kannada: ನಿದ್ದೆ ಕದ್ದ ಚೋರಿ! ನಟಿ `ಭಾನುಮತಿ’ ಹಾಟ್‌ ಪೋಟೊಗಳಿಗೆ ಫ್ಯಾನ್ಸ್ ಫುಲ್ ಫಿದಾ

Kannada Serials
ಕಿರುತೆರೆ7 months ago

Kannada Serials TRP: 2ನೇ ಸ್ಥಾನದಲ್ಲಿ 2 ಧಾರಾವಾಹಿಗಳು; ಟಿಆರ್‌ಪಿ ರೇಸ್‌ನಲ್ಲಿಲ್ಲ ಭಾಗ್ಯಲಕ್ಷ್ಮೀ!

Bigg Boss- Saregamapa 20 average TRP
ಕಿರುತೆರೆ7 months ago

Kannada Serials TRP: ಏಳನೇ ಸ್ಥಾನಕ್ಕೆ ʻಅಮೃತಧಾರೆʼ ಕುಸಿತ; ಬಿಗ್‌ ಬಾಸ್‌-ಸರಿಗಮಪ ಟಿಆರ್‌ಪಿ ಎಷ್ಟು?

galipata neetu
ಕಿರುತೆರೆ5 months ago

Kanyadana Serial: ಕಿರುತೆರೆಗೆ ಮತ್ತೆ ಎಂಟ್ರಿ ಕೊಟ್ಟ ʻಗಾಳಿಪಟʼ ಖ್ಯಾತಿಯ ʻನೀತುʼ!

Kannada Serials
ಕಿರುತೆರೆ7 months ago

Kannada Serials TRP: ನಾಲ್ಕನೇ ಸ್ಥಾನಕ್ಕೆ ಕುಸಿತ ಕಂಡ ʻಸೀತಾ ರಾಮʼ; ಟಿಆರ್‌ಪಿ ರೇಸ್‌ಗೆ ʻಭಾಗ್ಯಲಕ್ಷ್ಮಿʼ ಬ್ಯಾಕ್‌!

Kannada Serials
ಕಿರುತೆರೆ7 months ago

Kannada Serials TRP: ಟಿಆರ್‌ಪಿಯಲ್ಲಿ ʻಭಾಗ್ಯಲಕ್ಷ್ಮೀʼ ಹವಾ; ʻಪುಟ್ಟಕ್ಕನ ಮಕ್ಕಳುʼ ಧಾರಾವಾಹಿಗೆ ಸಂಕಷ್ಟ!

Bigg Boss' dominates TRP; Sita Rama fell to the sixth position
ಕಿರುತೆರೆ7 months ago

Kannada Serials TRP: ಟಿಆರ್‌ಪಿಯಲ್ಲಿ ʻಬಿಗ್ ಬಾಸ್ʼದೇ ಮೇಲುಗೈ; 6ನೇ ಸ್ಥಾನಕ್ಕೆ ಕುಸಿದ ʻಸೀತಾ ರಾಮʼ

geetha serial Dhanush gowda engagement
ಕಿರುತೆರೆ5 months ago

Dhanush Gowda: ಗೀತಾ ಧಾರಾವಾಹಿ ನಟನ ನಿಶ್ಚಿತಾರ್ಥ; ಭವ್ಯಾಳ ಕಮೆಂಟ್‌ ಬಾಕ್ಸ್‌ ಆಫ್‌!

varun
ಕಿರುತೆರೆ6 months ago

Brindavana Serial: ʼಬೃಂದಾವನʼ ಧಾರಾವಾಹಿಯಲ್ಲಿ ದೊಡ್ಡ ಟ್ವಿಸ್ಟ್‌; ಪ್ರಮುಖ ಪಾತ್ರಧಾರಿಯೇ ಬದಲು

Kannada Serials
ಕಿರುತೆರೆ8 months ago

Kannada Serials TRP: ಟಿಆರ್‌ಪಿಯಲ್ಲಿ ಏರಿಕೆ ಕಂಡ ʻಅಮೃತಧಾರೆʼ; ʻಗಟ್ಟಿಮೇಳʼಕ್ಕೆ ನಾಲ್ಕನೇ ಸ್ಥಾನ!

Prajwal Revanna case Revanna bail plea to be heard on Monday Advocate Nagesh argument was as follows
ಕ್ರೈಂ4 hours ago

Prajwal Revanna Case: ರೇವಣ್ಣ ಜಾಮೀನು ಅರ್ಜಿ ಸೋಮವಾರಕ್ಕೆ: ಎಸ್‌ಐಟಿಗೆ ಹಿಗ್ಗಾಮುಗ್ಗಾ ತರಾಟೆ; ವಕೀಲ ನಾಗೇಶ್‌ ವಾದ ಹೀಗಿತ್ತು!

Prajwal Revanna Case Hasanambe is going to destroy this government HD Kumaraswamy curse
ರಾಜಕೀಯ6 hours ago

Prajwal Revanna Case: ಈ ಸರ್ಕಾರವನ್ನು ಹಾಸನಾಂಬೆ ಧ್ವಂಸ ಮಾಡಲಿದ್ದಾಳೆ: ಎಚ್‌ಡಿಕೆ ಶಾಪ

Prajwal Revanna Case DK Shivakumar alleged mastermind in 25000 pen drive allotment
ಹಾಸನ6 hours ago

Prajwal Revanna Case: 25,000 ಪೆನ್ ಡ್ರೈವ್ ಹಂಚಿಕೆಯಲ್ಲಿ ಡಿ.ಕೆ. ಶಿವಕುಮಾರ್ ಮಾಸ್ಟರ್ ಮೈಂಡ್ ಎಂದು ರಾಜ್ಯಪಾಲರಿಗೆ ದೂರು!

SSLC Result 2024 what is the reason for most of the students fail in SSLC
ಕರ್ನಾಟಕ13 hours ago

SSLC Result 2024: ಎಸ್‌ಎಸ್‌ಎಲ್‌ಸಿಯಲ್ಲಿ ಹೆಚ್ಚಿನ ಮಕ್ಕಳು ಫೇಲ್‌ ಆಗಲು ಶಿಕ್ಷಣ ಇಲಾಖೆಯ ಈ ನಿರ್ಧಾರವೇ ಕಾರಣ!

Sslc exam Result 2024
ಶಿಕ್ಷಣ13 hours ago

SSLC Result 2024 : ಎಸ್‌ಎಸ್‌ಎಲ್‌ಸಿ ಪರೀಕ್ಷೆಯಲ್ಲಿ ಫೇಲಾದರೂ, ಕಡಿಮೆ ಅಂಕ ಬಂದರೂ ಡೋಂಟ್‌ ವರಿ; ಇನ್ನೂ ಇದೆ ಎರಡು ಚಾನ್ಸ್‌!

SSLC Result 2024 secret behind 20 percent grace marks
ಕರ್ನಾಟಕ13 hours ago

SSLC Result 2024: ಎಸ್‌ಎಸ್‌ಎಲ್‌ಸಿಯಲ್ಲಿ ಈ ಬಾರಿ ನೂರಕ್ಕೆ 25 ಅಂಕ ಪಡೆದವರೂ ಪಾಸ್! ಶೇ. 20 ಗ್ರೇಸ್ ಮಾರ್ಕ್ಸ್ ಕೊಟ್ಟಿದ್ದರ ಹಿಂದಿದೆ ಇಂಟರೆಸ್ಟಿಂಗ್ ಕತೆ!

SSLC Result 2024 78 schools get zero results in SSLC exams
ಬೆಂಗಳೂರು14 hours ago

SSLC Result 2024: ಎಸ್‌ಎಸ್‌ಎಲ್‌ಸಿ ಎಕ್ಸಾಂನಲ್ಲಿ ಸಿಕ್ಸರ್‌ ಬಾರಿಸಿದ ಗ್ರಾಮೀಣ ಪ್ರತಿಭೆಗಳು; 78 ಶಾಲೆಗಳಲ್ಲಿ ಶೂನ್ಯ ರಿಸಲ್ಟ್‌!

SSLC Result 2024 SSLC students get 20 percent grace marks but result is very poor
ಶಿಕ್ಷಣ14 hours ago

SSLC Result 2024: ಎಸ್‌ಎಸ್‌ಎಲ್‌ಸಿ ಮಕ್ಕಳಿಗೆ ಸಿಕ್ತು 20 ಪರ್ಸೆಂಟ್ ಗ್ರೇಸ್ ಮಾರ್ಕ್ಸ್‌! ಆದ್ರೂ ಫಲಿತಾಂಶ ತೀರಾ ಕಳಪೆ

SSLC Exam Result 2024 Announce
ಬೆಂಗಳೂರು16 hours ago

SSLC Result 2024: ಎಸ್‌ಎಸ್‌ಎಲ್‌ಸಿ ಫಲಿತಾಂಶ ಪ್ರಕಟ; ಶೇ. 73.40 ವಿದ್ಯಾರ್ಥಿಗಳು ಪಾಸ್‌, ಉಡುಪಿ ಫಸ್ಟ್‌, ಯಾದಗಿರಿ ಲಾಸ್ಟ್‌

Dina Bhavishya
ಭವಿಷ್ಯ2 days ago

Dina Bhavishya : ಅಮಾವಾಸ್ಯೆ ದಿನ ಈ ರಾಶಿಯವರಿಗೆ ಅದೃಷ್ಟ; ಹಣ ಗಳಿಕೆಗೆ ಪುಷ್ಟಿ

ಟ್ರೆಂಡಿಂಗ್‌