Prithviraj Sukumaran: ಹೀಗಿದೆ ನೋಡಿ ʼಆಡು ಜೀವಿತಂʼ ಟ್ರೈಲರ್‌: ಮಾ. 28ಕ್ಕೆ ತೆರೆಗೆ - Vistara News

ಮಾಲಿವುಡ್

Prithviraj Sukumaran: ಹೀಗಿದೆ ನೋಡಿ ʼಆಡು ಜೀವಿತಂʼ ಟ್ರೈಲರ್‌: ಮಾ. 28ಕ್ಕೆ ತೆರೆಗೆ

Prithviraj Sukumaran: ಹೆಸರಾಂತ ಬರಹಗಾರ ಬೆನ್ಯಾಮಿನ್ ಬರೆದಿರುವ ಈ ಕಥೆ 90ರ ದಶಕದ ಆರಂಭದಲ್ಲಿ ಕೇರಳದ ಹಚ್ಚ ಹಸಿರಿನ ತೀರದಿಂದ ಅದೃಷ್ಟವನ್ನು ಹುಡುಕುತ್ತಾ ವಿದೇಶಕ್ಕೆ ವಲಸೆ ಹೋದ ಯುವಕ ನಜೀಬ್‌ನ ಜೀವನದ ಮೇಲೆ ಬೆಳಕು ಚೆಲ್ಲುತ್ತದೆ.

VISTARANEWS.COM


on

Prithviraj Sukumaran Aadujeevitham The Goat Life trailer out
ಮಹತ್ವದ, ಕುತೂಹಲಕರ ಸುದ್ದಿಗಾಗಿ ಫಾಲೊ ಮಾಡಿ
Koo

ಬೆಂಗಳೂರು: ಮಾಲಿವುಡ್‌ ಸೂಪರ್‌ ಸ್ಟಾರ್‌, ʼಸಲಾರ್‌ʼ ಚಿತ್ರದ ಮೂಲಕ ಮಿಂಚಿದ ಪೃಥ್ವಿರಾಜ್‌ ಸುಕುಮಾರನ್ (Prithviraj Sukumaran) ಅಭಿನಯದ ʼಆಡು ಜೀವಿತಂʼ ಟ್ರೈಲರ್‌ ಬಿಡುಗಡೆಗೊಂಡಿದೆ. ರಾಷ್ಟ್ರೀಯ ಪ್ರಶಸ್ತಿ ವಿಜೇತ ಬ್ಲೆಸ್ಸಿ ನಿರ್ದೇಶನದ ಈ ಸಿನಿಮಾ ಮಾರ್ಚ್ 28 ರಂದು ಬಿಡುಗಡೆಯಾಗಲಿದೆ. ಈ ಚಲನಚಿತ್ರವು ಮಲಯಾಳಂ ಸಾಹಿತ್ಯ ಪ್ರಪಂಚದಲ್ಲಿ ಅತ್ಯಂತ ಜನಪ್ರಿಯವಾದ, ಬೆಸ್ಟ್ ಸೆಲ್ಲರ್‌ಗಳಲ್ಲಿ ಒಂದಾದ ‘ಆಡು ಜೀವಿತಂ’ ಕಾದಂಬರಿಯನ್ನು ಆಧರಿಸಿದೆ. 

ಹೆಸರಾಂತ ಬರಹಗಾರ ಬೆನ್ಯಾಮಿನ್ ಬರೆದಿರುವ ಈ ಕಥೆ 90ರ ದಶಕದ ಆರಂಭದಲ್ಲಿ ಕೇರಳದ ಹಚ್ಚ ಹಸಿರಿನ ತೀರದಿಂದ ಅದೃಷ್ಟವನ್ನು ಹುಡುಕುತ್ತಾ ವಿದೇಶಕ್ಕೆ ವಲಸೆ ಹೋದ ಯುವಕ ನಜೀಬ್‌ನ ಜೀವನದ ಮೇಲೆ ಬೆಳಕು ಚೆಲ್ಲುತ್ತದೆ. ‘ದಿ ಗೋಟ್ಸ್ ಲೈಫ್’ ಎಂದೂ ಕರೆಯಲ್ಪಡುವ ಈ ಚಿತ್ರದ ಅಧಿಕೃತ ವೆಬ್‌ಸೈಟ್ ಅನ್ನು ಇತ್ತೀಚೆಗೆ ಬಿಡುಗಡೆ ಮಾಡಲಾಗಿದೆ. ಟ್ರೈಲರ್‌ಗೆ ನೋಡುಗರು ಮೆಚ್ಚುಗೆ ವ್ಯಕ್ತಪಡಿಸಿದ್ದಾರೆ.

ಇದನ್ನೂ ಓದಿ: Prithviraj Sukumaran: `ಆಡು ಜೀವಿತಂ’ ಸಿನಿಮಾದ ಎರಡನೇ ಪೋಸ್ಟರ್‌ ಬಿಡುಗಡೆ ಮಾಡಿದ ರಣವೀರ್ ಸಿಂಗ್!

ಪೃಥ್ವಿರಾಜ್‌ ಸುಕುಮಾರನ್ ಮಾಧ್ಯಮವೊಂದಕ್ಕೆ ಮಾತನಾಡಿ ʻʻಇದು ಸುದೀರ್ಘ ಪ್ರಯಾಣವಾಗಿತ್ತು. ಒಂದು ದಶಕದ ಸುದೀರ್ಘ ಕಾಯುವಿಕೆಯ ನಂತರ ಪ್ರೇಕ್ಷಕರ ಮುಂದೆ ಸಿನಿಮಾ ಬರುತ್ತಿದೆ. ಮೇಕೆಯ ಜೀವನ ನಮಗೆ ಕೇವಲ ಒಂದು ಚಲನಚಿತ್ರವಾಗಿಲ್ಲ. ,ಇದು ನಮ್ಮ ಹೃದಯವನ್ನು ಮುಟ್ಟಿದ ಮತ್ತು ನಮ್ಮೊಂದಿಗೆ ಶಾಶ್ವತವಾಗಿ ಉಳಿಯುವ ಕಥೆಯಾಗಿದೆ. ಪ್ರೇಕ್ಷಕರೂ ಅದೇ ರೀತಿ ಭಾವಿಸುತ್ತಾರೆ ಎಂದು ನಾವು ಭಾವಿಸುತ್ತೇನೆʼʼ ಎಂದರು.

ವಿಷುಯಲ್ ರೊಮ್ಯಾನ್ಸ್ ಸಂಸ್ಥೆ ನಿರ್ಮಿಸಿದ ಈ ಚಿತ್ರದಲ್ಲಿ ಹಾಲಿವುಡ್ ನಟ ಜಿಮ್ಮಿ ಜೀನ್-ಲೂಯಿಸ್, ಅಮಲಾ ಪೌಲ್, ಭಾರತೀಯ ನಟ ಕೆ.ಆರ್.ಗೋಕುಲ್ ಮತ್ತು ಹೆಸರಾಂತ ಅರಬ್ ನಟರಾದ ತಾಲಿಬ್ ಅಲ್ ಬಲುಶಿ ಮತ್ತು ರಿಕಾಬಿ ಪ್ರಮುಖ ಪಾತ್ರಗಳಲ್ಲಿದ್ದಾರೆ. ಮಾರ್ಚ್ 28ರಂದು ಈ ಚಿತ್ರ ಮಲಯಾಳಂ ಜತೆಗೆ ಹಿಂದಿ, ತಮಿಳು, ತೆಲುಗು ಮತ್ತು ಕನ್ನಡದಲ್ಲಿ ತೆರೆ ಕಾಣಲಿದೆ.

ಕ್ಷಣ ಕ್ಷಣದ ಮಾಹಿತಿಗಾಗಿ Vistara News FaceBook ಪೇಜ್ ಫಾಲೋ ಮಾಡಿ
ಮಹತ್ವದ ಮಾಹಿತಿಗಾಗಿ ವಿಸ್ತಾರ ನ್ಯೂಸ್ ಆ್ಯಪ್ ಉಚಿತವಾಗಿ ಡೌನ್ ಲೋಡ್ ಮಾಡಿಕೊಳ್ಳಿ: Andriod App | IOS App
Continue Reading
Click to comment

Leave a Reply

Your email address will not be published. Required fields are marked *

ಮಾಲಿವುಡ್

Aavesham Releases On OTT: ಸದ್ದಿಲ್ಲದೆ ಒಟಿಟಿಗೆ ಎಂಟ್ರಿ ಕೊಟ್ಟ ಫಹಾದ್ ಫಾಸಿಲ್ ಅಭಿನಯದ ʻಆವೇಶಂʼ!

Aavesham Releases On OTT: ಆವೇಶಂʼ ಸಿನಿಮಾವು ಭಾರತದಲ್ಲಿ 93.9 ಕೋಟಿ ರೂ. ಗಳಿಕೆ ಮಾಡಿತ್ತು. ವಿಶ್ವಾದ್ಯಂತ ಬಾಕ್ಸ್ ಆಫೀಸ್‌ನಲ್ಲಿ 146.9 ಕೋಟಿ ರೂ. ಗಳಿಕೆ ಕಂಡಿತ್ತು. ಈ ಚಿತ್ರದ ಬಜೆಟ್‌ 30 ಕೋಟಿ ರೂ. ಆಗಿತ್ತು. ಏಪ್ರಿಲ್ 11 ರಂದು ಚಿತ್ರಮಂದಿರಗಳಲ್ಲಿ ಬಿಡುಗಡೆಯಾದ ʻಆವೇಶಂʼ (Aavesham Releases On OTT) ಪ್ರೇಕ್ಷಕರು ಮತ್ತು ವಿಮರ್ಶಕರಿಂದ ಮೆಚ್ಚುಗೆ ಪಡೆದುಕೊಂಡಿತ್ತು. ಥಿಯೇಟರ್‌ನಲ್ಲಿ ಬಿಡುಗಡೆಯಾದ ಒಂದು ತಿಂಗಳಿಗಿಂತ ಕಡಿಮೆ ಅವಧಿಯಲ್ಲಿ, ಒಟಿಟಿಯಲ್ಲಿ ಸ್ಟ್ರೀಮ್ ಆಗುತ್ತಿದೆ.

VISTARANEWS.COM


on

Aavesham Releases On OTT Fahadh Faasil Hit Malayalam Film
Koo

ಬೆಂಗಳೂರು: ಫಹಾದ್ ಫಾಸಿಲ್ (Fahadh Faasil) ಅಭಿನಯದ ಬ್ಲಾಕ್‌ಬಸ್ಟರ್‌ ಮಲಯಾಳಂ ಸಿನಿಮಾ ʻಆವೇಶಂʼ ಒಟಿಟಿಗೆ ಸದ್ದಿಲ್ಲದೆ ಎಂಟ್ರಿ ಕೊಟ್ಟಿದೆ. ಏಪ್ರಿಲ್ 11 ರಂದು ಚಿತ್ರಮಂದಿರಗಳಲ್ಲಿ ಬಿಡುಗಡೆಯಾದ ʻಆವೇಶಂʼ (Aavesham Releases On OTT) ಪ್ರೇಕ್ಷಕರು ಮತ್ತು ವಿಮರ್ಶಕರಿಂದ ಮೆಚ್ಚುಗೆ ಪಡೆದುಕೊಂಡಿತ್ತು. ಥಿಯೇಟರ್‌ನಲ್ಲಿ ಬಿಡುಗಡೆಯಾದ ಒಂದು ತಿಂಗಳಿಗಿಂತ ಕಡಿಮೆ ಅವಧಿಯಲ್ಲಿ, ಒಟಿಟಿಯಲ್ಲಿ ಸ್ಟ್ರೀಮ್ ಆಗುತ್ತಿದೆ.

ʻಆವೇಶಂʼ ಸಿನಿಮಾವು ಭಾರತದಲ್ಲಿ 93.9 ಕೋಟಿ ರೂ. ಗಳಿಕೆ ಮಾಡಿತ್ತು. ವಿಶ್ವಾದ್ಯಂತ ಬಾಕ್ಸ್ ಆಫೀಸ್‌ನಲ್ಲಿ 146.9 ಕೋಟಿ ರೂ. ಗಳಿಕೆ ಕಂಡಿತ್ತು. ಈ ಚಿತ್ರದ ಬಜೆಟ್‌ 30 ಕೋಟಿ ರೂ. ಆಗಿತ್ತು. ಇದೀಗ ಅಮೆಜಾನ್‌ ಪ್ರೈಂನಲ್ಲಿ ಸಿನಿಮಾ ಸ್ಟ್ರೀಮಿಂಗ್‌ ಆಗುತ್ತಿದೆ. ಡಬ್ಬಿಂಗ್ ಆವೃತ್ತಿಗಳ ಕುರಿತು ಇನ್ನೂ ಯಾವುದೇ ಅಪಡೇಟ್‌ ಬಂದಿಲ್ಲ. ಫ್ರಂಟ್ ರೋ ಅವರ ಟ್ವೀಟ್ ಪ್ರಕಾರ, ಆವೇಶಂನ ಡಿಜಿಟಲ್ ಹಕ್ಕುಗಳು 35 ಕೋಟಿ ರೂಪಾಯಿಗಳಿಗೆ ಮಾರಾಟವಾಗಿವೆ. ಈ ಮೂಲಕ ದುಲ್ಕರ್ ಸಲ್ಮಾನ್ ಅವರ ʻಕಿಂಗ್ ಆಫ್ ಕೋಥಾʼದ ದಾಖಲೆಯನ್ನು ಮುರಿದಿದೆ ಎಂದು ವರದಿಯಾಗಿದೆ. ʻಕಿಂಗ್ ಆಫ್ ಕೋಥಾʼ 32 ಕೋಟಿ ರೂಪಾಯಿಗಳಿಗೆ ಮಾರಾಟ ಮಾಡಲಾಗಿತ್ತು.

ಜಿತು ಮಾಧವನ್ ನಿರ್ದೇಶನದ ಈ ಚಿತ್ರದಲ್ಲಿ ಆಶಿಶ್ ವಿದ್ಯಾರ್ಥಿ, ಮನ್ಸೂರ್ ಅಲಿ ಖಾನ್ ಮತ್ತು ಸಜಿನ್ ಗೋಪು ಕೂಡ ನಟಿಸಿದ್ದಾರೆ. ಮಲಯಾಳಂ ಸಿನಿಮಾದ ಪ್ರಮುಖ ಕಥೆ ಬೆಂಗಳೂರಿನಲ್ಲಿ ನಡೆಯುತ್ತದೆ. ಓದಲೆಂದು ಬೆಂಗಳೂರಿಗೆ ಬರುವ ಮೂವರು ಹುಡುಗರು ಅಲ್ಲಿ ಜಗಳದಲ್ಲಿ ಸಿಕ್ಕಿ ಬಿದ್ದು ಸ್ಥಳೀಯ ದರೋಡೆಕೋರನ ನೆರವಿನಿಂದ ಗೆಲುವು ಪಡೆಯಲು ಪ್ರಯತ್ನಿಸುವಂತಹ ಕಥೆ ಹೊಂದಿದೆ. ಆ ಸ್ಥಳೀಯ ದರೋಡೆಕೋರ ಬೇರಾರು ಅಲ್ಲ, ಫಹಾದ್‌ ಫಾಸಿಲ್‌.

ಸಂಪೂರ್ಣ ಬಿಳಿ ಉಡುಗೆಯಲ್ಲಿ, ಚಿನ್ನದ ಸರಗಳೊಂದಿಗೆ, ದಪ್ಪ ಮೀಸೆಯನ್ನು ಹೊಂದಿರುವ ಫಹಾದ್‌ ಪಾತ್ರ ಪ್ರೇಕ್ಷಕರಿಂದ ಸಾಕಷ್ಟು ಪ್ರೀತಿಯನ್ನು ಪಡೆದಿದೆ. ತಮ್ಮ ಪಾತ್ರದ ಬಗ್ಗೆ ಮಾತನಾಡಿದ ಫಹಾದ್ ಅವರು ರಂಗಾ ಪಾತ್ರವನ್ನು ಏಕೆ ಆಯ್ಕೆ ಮಾಡಿಕೊಂಡೆ ಎಂಬುದರ ಕುರಿತು ಈ ಮುಂಚೆ ಹೇಳಿಕೊಂಡಿದ್ದರು. ʻʻನಾನು ಈ ಮೊದಲು ಅಂತಹ ಪಾತ್ರಗಳನ್ನು ಮಾಡಿಲ್ಲ. ಆದ್ದರಿಂದ ಈ ಕಥೆ ನನ್ನ ಬಳಿಗೆ ಬಂದಾಗ, ನಾನು ಹೌದು ಎಂದು ಹೇಳಿದೆ. ಈ ಹಿಂದೆ ನಾನು ಮಾಡಿದ್ದ ಪಾತ್ರಗಳಿಗಿಂತ ಭಿನ್ನವಾಗಿ ಇತ್ತು. ಅಲ್ಲದೆ, ನಾನು ಕನ್ನಡ ಮತ್ತು ಮಲಯಾಳಂ ಮಿಶ್ರಿತ ಭಾಷೆ ಮಾತನಾಡಬೇಕು ಎಂದು ಮನೋರಮಾ ಹೇಳಿದ್ದರುʼʼ ಎಂದರು. ಇವು 2024ರಲ್ಲಿ ಅತ್ಯಧಿಕ ಗಳಿಕೆ ಮಾಡಿದ ನಾಲ್ಕನೇ ಮಲಯಾಳ ಸಿನಿಮಾವೆಂಬ ಖ್ಯಾತಿಗೆ ಪಾತ್ರವಾಗಿತ್ತು.

ಇದನ್ನೂ ಓದಿ: Thug Life Movie: ಕಮಲ್‌ ಹಾಸನ್‌ ಸಿನಿಮಾಗೆ ಕಾಲಿವುಡ್‌ ನಟ ಸಿಂಬು ಎಂಟ್ರಿ!

ಇನ್ನು ಫಹಾದ್‌ ಫಾಸಿಲ್‌ ಹಲವು ಬಹು ನಿರೀಕ್ಷಿತ ಚಿತ್ರಗಳಲ್ಲಿ ನಟಿಸುತ್ತಿದ್ದಾರೆ. ಅಲ್ಲು ಅರ್ಜುನ್ ಅವರ ಪ್ಯಾನ್‌ ಇಂಡಿಯಾ ಚಿತ್ರ ‌ʼಪುಷ್ಪ 2: ದಿ ರೂಲ್‌ʼ ಸಿನಿಮಾದ ಮುಖ್ಯ ಪಾತ್ರದಲ್ಲಿ ಫಹಾದ್‌ ನಟಿಸುತ್ತಿದ್ದಾರೆ. ರಶ್ಮಿಕಾ ಮಂದಣ್ಣ ನಾಯಕಿಯಾಗಿರುವ ಈ ಚಿತ್ರದ ಮೊದಲ ಭಾಗ ಸೂಪರ್‌ ಹಿಟ್‌ ಆಗಿತ್ತು. ಅಲ್ಲದೆ ಅಲ್ಲು ಅರ್ಜುನ್‌ ಅವರಿಗೆ ರಾಷ್ಟ್ರ ಪ್ರಶಸ್ತಿಯನ್ನೂ ತಂಡು ಕೊಟ್ಟಿತ್ತು. ಕಥೆಗೆ ಟ್ವಿಸ್ಟ್‌ ಕೊಡುವ ಪಾತ್ರದಲ್ಲಿ ಫಹಾದ್‌ ನಟಿಸಿದ್ದರು. ಎರಡನೇ ಭಾಗದಲ್ಲಿನ ಅವರ ಪಾತ್ರದ ಬಗ್ಗೆ ಕುತೂಹಲ ಮೂಡಿದೆ.

ಇದರ ಜತೆಗೆ ಹಲವು ವರ್ಷಗಳ ಬಳಿಕ ತೆರೆ ಮೇಲೆ ಒಂದಾಗುತ್ತಿರುವ ಸೂಪರ್‌ ಸ್ಟಾರ್‌ಗಳಾದ ರಜನಿಕಾಂತ್‌- ಅಮಿತಾಭ್‌ ಬಚ್ಚನ್‌ ಅವರ ʼವೆಟ್ಟೈಯನ್‌ʼ ಸಿನಿಮಾದಲ್ಲಿ ಫಹಾದ್‌ ಅಭಿನಯಿಸುತ್ತಿದ್ದಾರೆ. ಇದನ್ನು ಟಿ.ಜೆ.ಜ್ಞಾನವೇಲ್ ನಿರ್ದೇಶಿಸುತ್ತಿದ್ದಾರೆ. ರಾಣಾ ದಗ್ಗುಬಾಟಿ, ಮಂಜು ವಾರಿಯರ್‌, ರಿತಿಕಾ ಸಿಂಗ್‌, ದುಶಾರಾ ವಿಜಯನ್‌ ಮತ್ತಿತರರು ಮುಖ್ಯ ಪಾತ್ರಗಳಲ್ಲಿ ನಟಿಸುತ್ತಿದ್ದಾರೆ. ಅಲ್ಲದೆ ಫಾಹದ್‌ ಮಲಯಾಳಂನ ʼಆವೇಶಮ್‌ʼ, ʼಪಾಟ್ಟುʼ, ʼಹನುಮಾನ್‌ ಗೇರ್‌ʼ ಮತ್ತಿತರ ಚಿತ್ರಗಳಲ್ಲಿ ಕಾಣಿಸಿಕೊಳ್ಳುತ್ತಿದ್ದಾರೆ.

Continue Reading

ಮಾಲಿವುಡ್

Sangeeth Sivan dies: ಖ್ಯಾತ ನಿರ್ದೇಶಕ ಸಂಗೀತ್ ಶಿವನ್ ನಿಧನ

Sangeeth Sivan dies ಸಂಗೀತ್ ಶಿವನ್ ಮೂಲತಃ ಕೇರಳದ ತಿರುವನಂತಪುರಂನವರು. 1989 ರಲ್ಲಿ ಆಮೀರ್ ಖಾನ್-ನ ಅಭಿನಯದ ರಾಖ್‌ಗೆ ಕಾರ್ಯನಿರ್ವಾಹಕ ನಿರ್ಮಾಪಕರಾಗಿ ಸಿನಿಮಾ ರಂಗಕ್ಕೆ ಎಂಟ್ರಿ ಕೊಟ್ಟರು. 1990ರಲ್ಲಿ ಮಲಯಾಳಂನ ‘ವ್ಯೂಹಂ’ ಸಿನಿಮಾಗೆ ನಿರ್ದೇಶನ ಮಾಡುವ ಮೂಲಕ ಹೊಸ ಅಧ್ಯಾಯ ಆರಂಭಿಸಿದರು.

VISTARANEWS.COM


on

Sangeeth Sivan dies Riteish Deshmukh Tusshar Kapoor pay tribute
Koo

ಬೆಂಗಳೂರು: ಮಲಯಾಳಂ ಮತ್ತು ಹಿಂದಿ ಚಿತ್ರರಂಗದಲ್ಲಿ ಖ್ಯಾತಿ ಪಡೆದ ನಿರ್ದೇಶಕ ಸಂಗೀತ್ ಶಿವನ್ (Sangeeth Sivan dies) ಮೇ 8 ರಂದು ಮುಂಬೈನ ಖಾಸಗಿ ಆಸ್ಪತ್ರೆಯಲ್ಲಿ ನಿಧನರಾದರು. ಸಂಗೀತ್ ಶಿವನ್ ಅವರಿಗೆ 61 ವರ್ಷ ವಯಸ್ಸಾಗಿತ್ತು. ಮುಂಬೈನ ಖಾಸಗಿ ಆಸ್ಪತ್ರೆಯಲ್ಲಿ ಅವರು ಚಿಕಿತ್ಸೆ ಪಡೆಯುತ್ತಿದ್ದರು.

ಸಂಗೀತ್ ಶಿವನ್ ಮೂಲತಃ ಕೇರಳದ ತಿರುವನಂತಪುರಂನವರು. 1989 ರಲ್ಲಿ ಆಮೀರ್ ಖಾನ್ ಅಭಿನಯದ ರಾಖ್‌ಗೆ ಕಾರ್ಯನಿರ್ವಾಹಕ ನಿರ್ಮಾಪಕರಾಗಿ ಸಿನಿಮಾ ರಂಗಕ್ಕೆ ಎಂಟ್ರಿ ಕೊಟ್ಟರು. 1990ರಲ್ಲಿ ಮಲಯಾಳಂನ ‘ವ್ಯೂಹಂ’ ಸಿನಿಮಾಗೆ ನಿರ್ದೇಶನ ಮಾಡುವ ಮೂಲಕ ಹೊಸ ಅಧ್ಯಾಯ ಆರಂಭಿಸಿದರು. ಮೋಹನ್​ಲಾಲ್​ ನಟನೆಯ ‘ಯೋಧ’ ಸಿನಿಮಾಗೆ ನಿರ್ದೇಶನ ಮಾಡಿ ಅವರು ಗುರುತಿಸಿಕೊಂಡರು.

ʻಜೋರ್ʼ, ʻಕ್ಯಾ ಕೂಲ್ ಹೈ ಹಮ್ʼ, ʻಅಪ್ನಾ ಸಪ್ನಾ ಮನಿ ಮನಿʼ ಮತ್ತು ʻಯಮ್ಲಾ ಪಗ್ಲಾ ದೀವಾನಾ 2ʼ ಮುಂತಾದ ಹಿಂದಿ ಚಲನಚಿತ್ರಗಳನ್ನು ಸಹ ನಿರ್ದೇಶಿಸಿದ್ದಾರೆ. ಮಲಯಾಳಂನ ‘ರೋಮಾಂಚಂ’ ಸಿನಿಮಾವನ್ನು ಹಿಂದಿಯಲ್ಲಿ ರಿಮೇಕ್​ ಮಾಡಲು ಅವರು ಮುಂದಾಗಿದ್ದರು. ಆ ಕೆಲಸ ಪೂರ್ಣಗೊಳ್ಳುವುದಕ್ಕೂ ಮೊದಲೇ ಅವರು ನಿಧನರಾಗಿರಾಗಿದ್ದಾರೆ.

ರಿತೇಶ್ ದೇಶ್‌ಮುಖ್ ಅವರು ಎಕ್ಸ್‌ ಮೂಲಕ ಸಂತಾಪ ವ್ಯಕ್ತಪಡಿಸಿದ್ದಾರೆ. “ಸಂಗೀತ್ ಶಿವನ್ ಸರ್ ಇನ್ನಿಲ್ಲ ಎಂದು ಗೊತ್ತಾದಾಗ ತೀವ್ರ ದುಃಖ ಮತ್ತು ಆಘಾತವಾಯಿತು.ಮೃದು ಮಾತು, ಸೌಮ್ಯ ಮತ್ತು ಅದ್ಭುತ ಮನುಷ್ಯ.ಅವರ ಕುಟುಂಬ ಮತ್ತು ಪ್ರೀತಿಪಾತ್ರರಿಗೆ, ಪತ್ನಿ, ಮಕ್ಕಳು, ಸಹೋದರರಿಗೆ ನನ್ನ ಸಂತಾಪʼʼಎಂದು ಬರೆದುಕೊಂಡಿದ್ದಾರೆ.

ಇದನ್ನೂ ಓದಿ: Do You Know: ನಿಮಗಿದು ಗೊತ್ತಾ? ಲವ್‌ ಮಾಡುತ್ತಿದ್ದರೆ ತೂಕ ಜಾಸ್ತಿಯಾಗುತ್ತದೆ!

ಸುನೀಲ್​ ಶೆಟ್ಟಿ, ರಿತೇಶ್​ ದೇಶಮುಖ್​, ಜಾಕಿ ಶ್ರಾಫ್​, ಸೆಲಿನಾ ಜೇಟ್ಲಿ, ಚಂಕಿ ಪಾಂಡೆ, ರಾಜ್​ಪಾಲ್​ ಯಾದವ್​, ತುಷಾರ್​ ಕಪೂರ್​, ಇಶಾ ಕೊಪ್ಪಿಕರ್​, ನೇಹಾ ದೂಪಿಯಾ, ಅನುಪಮ್​ ಖೇರ್​ ಮುಂತಾದ ಸೆಲೆಬ್ರಿಟಿಗಳ ಜೊತೆ ಸಂಗೀತ್​ ಶಿವನ್​ ಕೆಲಸ ಮಾಡಿದ್ದರು.

Continue Reading

ಮಾಲಿವುಡ್

Actor Sathyaraj: `ಬಾಹುಬಲಿ’ ಕಟ್ಟಪ್ಪನ ತೊಡೆ ಮೇಲೆ ಕುಳಿತ ಈ ಕ್ಯೂಟ್‌ ನಟ ಯಾರು? ಹೇಳಿ ನೋಡೋಣ!

Actor Sathyaraj: ಸತ್ಯರಾಜ್ ಅವರು 240 ಕ್ಕೂ ಹೆಚ್ಚು ಸಿನಿಮಾಗಳಲ್ಲಿ ನಟಿಸಿದ್ದಾರೆ. ಪ್ರಭಾಸ್ ಮತ್ತು ಎಸ್‌.ಎಸ್ ರಾಜಮೌಳಿ ಅವರ ಬಾಹುಬಲಿ ಸಿನಿಮಾದ ಕಟ್ಟಪ್ಪ ಪಾತ್ರಕ್ಕಾಗಿ ಸತ್ಯರಾಜ್ ವಿಶ್ವಾದ್ಯಂತ ಖ್ಯಾತಿಯನ್ನು ಗಳಿಸಿದರು. ಅವರು ಇನ್ನೂ ಅನೇಕ ಪ್ರೇಕ್ಷಕರಿಗೆ ಕಟ್ಟಪ್ಪ ಎಂತಲೇ ಪರಿಚಿತರಾಗಿದ್ದಾರೆ. ಈಗ ಮಲಯಾಳ ಖ್ಯಾತ ನಟನ ಬಾಲ್ಯದ ಫೋಟೊ ವೈರಲ್‌ ಆಗಿದೆ. ಮೇ 7ರಂದು, MUBI ಇಂಡಿಯಾದ ಅಧಿಕೃತ ಎಕ್ಸ್‌ ಖಾತೆ ಫೋಟೊ ಶೇರ್‌ ಮಾಡಿಕೊಂಡಿದೆ.

VISTARANEWS.COM


on

Actor Sathyaraj throwback picture of with veteran actor
Koo

ಬೆಂಗಳೂರು: ಬಾಹುಬಲಿ ಸಿನಿಮಾ ಕಟ್ಟಪ್ಪ (Baahubali Actor Sathyaraj) ಪಾತ್ರದ ಮೂಲಕ ಹೆಸರುವಾಸಿಯಾಗಿರುವ ತಮಿಳು ಮತ್ತು ತೆಲುಗು ನಟ ಸತ್ಯರಾಜ್ (Actor Sathyaraj) ಜತೆ ಫಹಾದ್ ಫಾಸಿಲ್ ಪೋಸ್‌ (Fahadh Faasil) ಕೊಟ್ಟಿದ್ದಾರೆ. ಇದು 80ರ ದಶಕದ ಫೋಟೊ. ಆಗ ಫಹಾದ್ ಫಾಸಿಲ್ ತುಂಬ ಚಿಕ್ಕವರಿದ್ದರು. ಸತ್ಯರಾಜ್ ತೊಡೆ ಮೇಲೆ ಕುಳಿತು ಫಹಾದ್ ಫಾಸಿಲ್ ಕ್ಯೂಟ್‌ ಆಗಿ ಸ್ಮೈಲ್‌ ಕೊಟ್ಟಿದ್ದಾರೆ. ಈ ಫೋಟೊ ಈಗ ಸೋಷಿಯಲ್‌ ಮೀಡಿಯಾದಲ್ಲಿ ವೈರಲ್‌ ಆಗುತ್ತಿದೆ. ನಟ ಸತ್ಯರಾಜ್ ಅವರು ಫಹಾದ್ ಅವರ ತಂದೆ ಫಾಸಿಲ್ ಜತೆ ತುಂಬ ಕ್ಲೋಸ್‌ ಇದ್ದರು. ಫಹಾದ್ ಅವರ ತಂದೆ ಫಾಸಿಲ್ ಹಾಗೂ ಸತ್ಯರಾಜ್‌ ‘ಎನ್ ಬೊಮ್ಮುಕುಟ್ಟಿ ಅಮ್ಮಾವುಕ್ಕು’ ಮತ್ತು ‘ಪೂವಿಜಿ ವಸಲಿಲೆ’ ಎಂಬ ತಮಿಳು ಚಿತ್ರಗಳಲ್ಲಿ ಒಟ್ಟಾಗಿ ಕೆಲಸ ಮಾಡಿದ್ದರು.

ಮೇ 7ರಂದು, MUBI ಇಂಡಿಯಾದ ಅಧಿಕೃತ ಎಕ್ಸ್‌ ಖಾತೆ ಸತ್ಯರಾಜ್ ಮತ್ತು ಫಹಾದ್ ಫಾಸಿಲ್ ಅವರ ಈ ಅಪರೂಪದ ಫೋಟೊವನ್ನು ಹಂಚಿಕೊಂಡಿದೆ. “1980ರ ದಶಕದಲ್ಲಿ ಸತ್ಯರಾಜ್ ಮತ್ತು ಫಹಾದ್ ಫಾಸಿಲ್ ” ಎಂದು ಪೋಸ್ಟ್‌ಗೆ ಶೀರ್ಷಿಕೆ ನೀಡಿದೆ. ಫಹಾದ್ ಫಾಸಿಲ್ ಜನಪ್ರಿಯ ನಿರ್ದೇಶಕ, ನಿರ್ಮಾಪಕ, ಮತ್ತು ಮಲಯಾಳಂ, ತಮಿಳು ಸಿನಿಮಾಗಳಲ್ಲಿ ನಟಿಸಿರುವ ಖ್ಯಾತ ನಟ.ಎರಡು ತಮಿಳು ಚಿತ್ರಗಳಲ್ಲಿ ಸತ್ಯರಾಜ್ ಜತೆಗೂ ಫಹಾದ್ ಫಾಸಿಲ್ ತೆರೆ ಹಂಚಿಕೊಂಡಿದ್ದರು. ಆ ಎರಡೂ ಸಿನಿಮಾಗಳ ಬ್ಲಾಕ್ಬಸ್ಟರ್ ಹಿಟ್ ಕಂಡಿವೆ.

ಇದನ್ನೂ ಓದಿ: Kanakalatha Passes Away: 350ಕ್ಕೂ ಹೆಚ್ಚು ಸಿನಿಮಾಗಳಲ್ಲಿ ನಟಿಸಿದ್ದ ಖ್ಯಾತ ನಟಿ ಇನ್ನಿಲ್ಲ

ನಟ ಫಹಾದ್ ಫಾಸಿಲ್ (Fahad Faasil) ಅವರು ತಮಿಳು, ತೆಲುಗು, ಕನ್ನಡ ಸಿನಿಮಾಗಳಲ್ಲಿ ನಟಿಸಿದ್ದಾರೆ. ಆದರೆ, ಅವರೆಂದಿಗೂ ಬಾಲಿವುಡ್​ನತ್ತ ಮುಖ ಮಾಡಿಲ್ಲ. ಪರಭಾಷೆಯ ‘ಸೂಪರ್ ಡಿಲಕ್ಸ್’, ‘ವಿಕ್ರಮ್’, ‘ಪುಷ್ಪ’ ಚಿತ್ರಗಳಲ್ಲಿ ಅವರು ಬಣ್ಣ ಹಚ್ಚಿದ್ದಾರೆ. ಅವರಿಗೆ ಈ ಮೊದಲು ಹಿಂದಿ ಆಫರ್​ಗಳು ಬಂದಿದ್ದವು. ಆದರೆ, ಅವರಿಗೆ ಯಾವುದೂ ಇಷ್ಟ ಆಗಿಲ್ಲ.

ಫಹಾದ್ ಫಾಸಿಲ್ ಕೊನೆಯದಾಗಿ ನಿರ್ದೇಶಕ ಜಿತು ಮಾಧವನ್ ಅವರ ‘ಆವೇಶಂ’ ನಲ್ಲಿ ಕಾಣಿಸಿಕೊಂಡರು. ಇದು ವಿಶ್ವಾದ್ಯಂತ ರೂ 150 ಕೋಟಿ ರೂ, ಗಳಿಕೆ ಕಂಡಿದೆ. ಫಹಾದ್ ಫಾಸಿಲ್ ನಟನೆಯ ‘ಪುಷ್ಪ: ದಿ ರೂಲ್’, ‘ಮಾರೀಸನ್’ ಮತ್ತು ರಜನಿಕಾಂತ್ ಅವರ ‘ವೆಟ್ಟೈಯನ್’ ಸೇರಿದಂತೆ ಮೂರು ಚಿತ್ರಗಳು ಬಿಡುಗಡೆಗೆ ಸಜ್ಜಾಗಿವೆ.

ಸತ್ಯರಾಜ್ ಕೊನೆಯದಾಗಿ ತಮಿಳು ಚಿತ್ರ ‘ಸಿಂಗಪುರ ಸಲೂನ್’ ನಲ್ಲಿ ಕಾಣಿಸಿಕೊಂಡಿದ್ದರು. ಸದ್ಯ ‘ತೋಜರ್ ಚೆಗುವೇರಾ’ ಬಿಡುಗಡೆಗೆ ಸಜ್ಜಾಗುತ್ತಿದ್ದಾರೆ. ಸಿನಿಮಾ ಬಿಡುಗಡೆ ದಿನಾಂಕ ಇನ್ನಷ್ಟೇ ಪ್ರಕಟವಾಗಬೇಕಿದೆ. ಸತ್ಯರಾಜ್ ಅವರು 240 ಕ್ಕೂ ಹೆಚ್ಚು ಸಿನಿಮಾಗಳಲ್ಲಿ ನಟಿಸಿದ್ದಾರೆ. ಪ್ರಭಾಸ್ ಮತ್ತು ಎಸ್‌.ಎಸ್ ರಾಜಮೌಳಿ ಅವರ ಬಾಹುಬಲಿ ಸಿನಿಮಾದ ಕಟ್ಟಪ್ಪ ಪಾತ್ರಕ್ಕಾಗಿ ಸತ್ಯರಾಜ್ ವಿಶ್ವಾದ್ಯಂತ ಖ್ಯಾತಿಯನ್ನು ಗಳಿಸಿದರು. ಅವರು ಇನ್ನೂ ಅನೇಕ ಪ್ರೇಕ್ಷಕರಿಗೆ ಕಟ್ಟಪ್ಪ ಎಂತಲೇ ಪರಿಚಿತರಾಗಿದ್ದಾರೆ.

Continue Reading

ಮಾಲಿವುಡ್

Kanakalatha Passes Away: 350ಕ್ಕೂ ಹೆಚ್ಚು ಸಿನಿಮಾಗಳಲ್ಲಿ ನಟಿಸಿದ್ದ ಖ್ಯಾತ ನಟಿ ಇನ್ನಿಲ್ಲ

Kanakalatha Passes Away: ಕಿರುತೆರೆ ಧಾರಾವಾಹಿಗಳಲ್ಲಿ ಹೆಚ್ಚಾಗಿ ಪೋಷಕ ಪಾತ್ರಗಳನ್ನೇ ನಿಭಾಯಿಸುತ್ತಿದ್ದರು ನಟಿ ಕನಕಲತಾ. ನಟಿ ಪಾರ್ಕಿನ್ಸನ್ ಕಾಯಿಲೆ ಮತ್ತು ಬುದ್ಧಿಮಾಂದ್ಯತೆಯಿಂದ (dementia and Parkinson’s disease) ಬಳಲುತ್ತಿದ್ದರು ಎಂದು ವರದಿಯಾಗಿದೆ.ಮೇ 6ರಂದು ತಿರುವನಂತಪುರಂನಲ್ಲಿರುವ ತಮ್ಮ ನಿವಾಸದಲ್ಲಿ ಕೊನೆಯುಸಿರೆಳೆದರು. ಕೊನೆಯದಾಗಿ 2023 ರಲ್ಲಿ ಗಣೇಶ್ ರಾಜ್ ಅವರ ‘ಪೂಕ್ಕಲಂ’ ಚಿತ್ರದಲ್ಲಿ ಕಾಣಿಸಿಕೊಂಡರು.

VISTARANEWS.COM


on

Kanakalatha Passes Away Film serial actor Mollywood
Koo

ಬೆಂಗಳೂರು: ಮಾಲಿವುಡ್‌ ಖ್ಯಾತ ನಟಿ ಕನಕಲತಾ ಅವರು (Kanakalatha passes away) ಮೇ 6ರಂದು ತಿರುವನಂತಪುರಂನಲ್ಲಿರುವ ತಮ್ಮ ನಿವಾಸದಲ್ಲಿ ಕೊನೆಯುಸಿರೆಳೆದರು. ಅವರಿಗೆ 63 ವರ್ಷ ವಯಸ್ಸಾಗಿತ್ತು. 2021 ರಿಂದ ಪಾರ್ಕಿನ್ಸನ್ ಕಾಯಿಲೆ ಮತ್ತು ಬುದ್ಧಿಮಾಂದ್ಯತೆಯಿಂದ (dementia and Parkinson’s disease) ಬಳಲುತ್ತಿದ್ದರು ಎಂದು ವರದಿಯಾಗಿದೆ.

ದಕ್ಷಿಣ ಭಾರತದ ಶ್ರೇಷ್ಠ ನಟಿ ಕನಕಲತಾ 350ಕ್ಕೂ ಹೆಚ್ಚು ಚಲನಚಿತ್ರಗಳು ಮತ್ತು 50ಕ್ಕೂ ಹೆಚ್ಚು ಧಾರಾವಾಹಿಗಳಲ್ಲಿ ನಟಿಸಿದ್ದರು. ಅನೇಕ ತಮಿಳು ಚಿತ್ರಗಳಲ್ಲಿ ಕೆಲಸ ಮಾಡಿದ್ದಾರೆ. ಒಂಬತ್ತನೇ ತರಗತಿಯಿಂದಲೇ ರಂಗಭೂಮಿ ಮತ್ತು ನಾಟಕದಲ್ಲಿ ತೊಡಗಿಸಿಕೊಂಡಿದ್ದ ಅವರು ರಂಗಭೂಮಿಯಲ್ಲಿ ತಮ್ಮ ಅಸಾಧಾರಣ ಪ್ರತಿಭೆಯಿಂದ ಸಿನಿಮಾ ಕ್ಷೇತ್ರವನ್ನು ಪ್ರವೇಶಿಸಿದರು.

ಈಗಾಗಲೇ ಹೇಳಿದಂತೆ ಕನಕಲತಾ ಅವರು ಪಾರ್ಕಿನ್ಸನ್‌ ಮತ್ತು ಮರೆವಿನ ಕಾಯಿಲೆಯಿಂದ ಬಳಲುತ್ತಿದ್ದರು. ಕನಕಲತಾ ಅವರ ಜೀವನದ ಕೊನೆಯ ಕೆಲವು ವರ್ಷಗಳಲ್ಲಿ ತುಂಬಾ ಕಷ್ಟಪಟ್ಟಿದ್ದರು. ತನ್ನ ಹೆಸರನ್ನು ನೆನಪಿಸಿಕೊಳ್ಳಲಾಗದಷ್ಟು, ಟಿವಿಯಲ್ಲಿ ತನ್ನ ಸಿನಿಮಾ ಕಂಡರೂ ಅದು ತಾನೇ ಎಂದು ಗುರುತಿಸಲಾಗದಷ್ಟು ಆರೋಗ್ಯ ಹದಗೆಟ್ಟಿತ್ತು ಎಂದು ವರದಿ ಆಗಿದೆ.

ಇದನ್ನೂ ಓದಿ: Ramana Avatara Movie: ಬಂಪರ್ ಆಫರ್; ಕೇವಲ 99 ರೂ.ಗೆ ಸಿಗಲಿದೆ ‘ರಾಮನ ಅವತಾರ’ ಸಿನಿಮಾ ಟಿಕೆಟ್

ಮಲಯಾಳಂ ನಟಿ ಕನಕಲತಾ ಅವರು ಆಗಸ್ಟ್‌ 24, 1960ರಲ್ಲಿ ಕೇರಳದ ಕೊಲ್ಲಂನಲ್ಲಿ ಪರಮೇಶ್ವರನ್‌ ಪಿಳ್ಳೈ ಮತ್ತು ಚಿನ್ನಮ್ಮ ದಂಪತಿಯ ಪುತ್ರಿಯಾಗಿ ಜನಿಸಿದರು. ಇವರು ಕೊಲ್ಲಾಮ್‌ನ ಸರಕಾರಿ ಮಹಿಳಾ ಶಾಲೆಯಲ್ಲಿ ಶಿಕ್ಷಣ ಪಡೆದರು. ಸಿನಿಮಾರಂಗಕ್ಕೆ ಪ್ರವೇಶಿಸುವ ಮೊದಲು ಅವರು ರಂಗಭೂಮಿ ಕಲಾವಿದೆಯಾಗಿದ್ದರು.

‘ಚಿಲ್ಲು’, ‘ಕರಿಯಿಲಕ್ಕಟ್ಟು ಪೋಲ್’, ‘ಜಾಗ್ರತ’, ‘ಕಿರೀಟಂ’, ‘ಸ್ಪಡಿಕಂ’, ಮತ್ತು ‘ಹರಿಕೃಷ್ಣನ್ಸ್’ ಸೇರಿದಂತೆ ಕೆಲವು ಪ್ರಮುಖ ಮಲಯಾಳಂ ಚಿತ್ರಗಳಲ್ಲಿನ ಅವರ ನೈಜ ಅಭಿನಯಕ್ಕೆ ಸಿನಿರಸಿಕರು ಮನಸೋತಿದ್ದರು. ಕೊನೆಯದಾಗಿ 2023 ರಲ್ಲಿ ಗಣೇಶ್ ರಾಜ್ ಅವರ ‘ಪೂಕ್ಕಲಂ’ ಚಿತ್ರದಲ್ಲಿ ಕಾಣಿಸಿಕೊಂಡರು.

ಪೃಥ್ವಿರಾಜ್ ಸುಕುಮಾರನ್ ಜತೆ 2006ರಲ್ಲಿ ತೆರೆಕಂಡ ‘ಪಾಕಲ’ ಚಿತ್ರದಲ್ಲಿ ಕನಕಲತಾ ತೆರೆ ಹಂಚಿಕೊಂಡಿದ್ದರು. ಪೃಥ್ವಿರಾಜ್ ಸುಕುಮಾರನ್ ಕೂಡ ನಟಿಯ ಪೋಸ್ಟ್‌ ಹಾಕಿ ಆತ್ಮಕ್ಕೆ ಶಾಂತಿ ಸಿಗಲಿ ಎಂದು ಪ್ರಾರ್ಥಿಸಿದ್ದಾರೆ. ಕಿರುತೆರೆ ಧಾರಾವಾಹಿಗಳಲ್ಲಿ ಹೆಚ್ಚಾಗಿ ಪೋಷಕ ಪಾತ್ರಗಳನ್ನೇ ನಿಭಾಯಿಸುತ್ತಿದ್ದರು ನಟಿ.

Continue Reading
Advertisement
IPL 2024
ಪ್ರಮುಖ ಸುದ್ದಿ1 min ago

IPL 2024 : ಆರ್​ಸಿಬಿಗೆ ಐದನೇ ವಿಜಯ, ಪಂಜಾಬ್​ ವಿರುದ್ಧ 60 ರನ್ ಭರ್ಜರಿ ಗೆಲುವು

Padma Awards 2024
ಪ್ರಮುಖ ಸುದ್ದಿ46 mins ago

Padma Awards 2024 : ವೈಜಯಂತಿಮಾಲಾ, ಚಿರಂಜೀವಿ ಸೇರಿದಂತೆ ಹಲವು ಗಣ್ಯರಿಗೆ ಪದ್ಮ ಪ್ರಶಸ್ತಿ ಪ್ರದಾನ

Prajwal Revanna Case
ಪ್ರಮುಖ ಸುದ್ದಿ1 hour ago

Prajwal Revanna Case : ಬಿಜೆಪಿ ಮುಖಂಡ ದೇವರಾಜೇಗೌಡ ವಿರುದ್ಧ ಲೈಂಗಿಕ ಕಿರುಕುಳ ಕೇಸ್​ ದಾಖಲು

Prajwal Revanna case Revanna bail plea to be heard on Monday Advocate Nagesh argument was as follows
ಕ್ರೈಂ2 hours ago

Prajwal Revanna Case: ರೇವಣ್ಣ ಜಾಮೀನು ಅರ್ಜಿ ಸೋಮವಾರಕ್ಕೆ: ಎಸ್‌ಐಟಿಗೆ ಹಿಗ್ಗಾಮುಗ್ಗಾ ತರಾಟೆ; ವಕೀಲ ನಾಗೇಶ್‌ ವಾದ ಹೀಗಿತ್ತು!

T20 World Cup 2024
ಪ್ರಮುಖ ಸುದ್ದಿ2 hours ago

T20 World Cup : ವಿಶ್ವ ಕಪ್​ಗೆ ತಂಡ ಪ್ರಕಟಿಸಿದ ಶ್ರೀಲಂಕಾ, ಸಿಎಸ್​​ಕೆ ಆಟಗಾರನಿಗೂ ಚಾನ್ಸ್​​

ಉತ್ತರ ಕನ್ನಡ2 hours ago

SSLC Result 2024: ಎಸ್‌ಎಸ್‌ಎಲ್‌ಸಿ ಪರೀಕ್ಷೆಯಲ್ಲಿ ಸಾರ್ವಭೌಮ ಗುರುಕುಲಕ್ಕೆ ಶೇ.100 ಫಲಿತಾಂಶ

Yallapur Vishwadarshana Group of institutions performed well in SSLC Result 2024
ಉತ್ತರ ಕನ್ನಡ3 hours ago

SSLC Result 2024: ಯಲ್ಲಾಪುರದ ವಿಶ್ವದರ್ಶನ ಶಿಕ್ಷಣ ಸಮೂಹ ಪ್ರೌಢಶಾಲೆಗಳ ಉತ್ತಮ ಸಾಧನೆ

women's Cricket team
ಕ್ರೀಡೆ3 hours ago

Womens Cricket Team : ಬಾಂಗ್ಲಾ ವಿರುದ್ಧ 5-0 ಕ್ಲೀನ್​ ಸ್ವೀಪ್ ಸಾಧನೆ ಮಾಡಿದ ಭಾರತದ ವನಿತೆಯರು

Mother passed SSLC exam with her son in Hassan
ಕರ್ನಾಟಕ3 hours ago

SSLC Result 2024: ಎಸ್‌ಎಸ್‌ಎಲ್‌ಸಿ ಪರೀಕ್ಷೆಯಲ್ಲಿ ಮಗನ ಜತೆ ತಾಯಿಯೂ ಪಾಸ್!

Failed in SSLC Exam Student suicide in mandya
ಮಂಡ್ಯ3 hours ago

SSLC Result 2024: ಎಸ್‌ಎಸ್‌ಎಲ್‌ಸಿ ಪರೀಕ್ಷೆಯಲ್ಲಿ ಫೇಲ್‌; ನೇಣಿಗೆ ಶರಣಾದ ವಿದ್ಯಾರ್ಥಿ

Sharmitha Gowda in bikini
ಕಿರುತೆರೆ7 months ago

Geetha Serial Kannada: ನಿದ್ದೆ ಕದ್ದ ಚೋರಿ! ನಟಿ `ಭಾನುಮತಿ’ ಹಾಟ್‌ ಪೋಟೊಗಳಿಗೆ ಫ್ಯಾನ್ಸ್ ಫುಲ್ ಫಿದಾ

Kannada Serials
ಕಿರುತೆರೆ7 months ago

Kannada Serials TRP: 2ನೇ ಸ್ಥಾನದಲ್ಲಿ 2 ಧಾರಾವಾಹಿಗಳು; ಟಿಆರ್‌ಪಿ ರೇಸ್‌ನಲ್ಲಿಲ್ಲ ಭಾಗ್ಯಲಕ್ಷ್ಮೀ!

Bigg Boss- Saregamapa 20 average TRP
ಕಿರುತೆರೆ7 months ago

Kannada Serials TRP: ಏಳನೇ ಸ್ಥಾನಕ್ಕೆ ʻಅಮೃತಧಾರೆʼ ಕುಸಿತ; ಬಿಗ್‌ ಬಾಸ್‌-ಸರಿಗಮಪ ಟಿಆರ್‌ಪಿ ಎಷ್ಟು?

galipata neetu
ಕಿರುತೆರೆ5 months ago

Kanyadana Serial: ಕಿರುತೆರೆಗೆ ಮತ್ತೆ ಎಂಟ್ರಿ ಕೊಟ್ಟ ʻಗಾಳಿಪಟʼ ಖ್ಯಾತಿಯ ʻನೀತುʼ!

Kannada Serials
ಕಿರುತೆರೆ7 months ago

Kannada Serials TRP: ನಾಲ್ಕನೇ ಸ್ಥಾನಕ್ಕೆ ಕುಸಿತ ಕಂಡ ʻಸೀತಾ ರಾಮʼ; ಟಿಆರ್‌ಪಿ ರೇಸ್‌ಗೆ ʻಭಾಗ್ಯಲಕ್ಷ್ಮಿʼ ಬ್ಯಾಕ್‌!

Kannada Serials
ಕಿರುತೆರೆ7 months ago

Kannada Serials TRP: ಟಿಆರ್‌ಪಿಯಲ್ಲಿ ʻಭಾಗ್ಯಲಕ್ಷ್ಮೀʼ ಹವಾ; ʻಪುಟ್ಟಕ್ಕನ ಮಕ್ಕಳುʼ ಧಾರಾವಾಹಿಗೆ ಸಂಕಷ್ಟ!

Bigg Boss' dominates TRP; Sita Rama fell to the sixth position
ಕಿರುತೆರೆ7 months ago

Kannada Serials TRP: ಟಿಆರ್‌ಪಿಯಲ್ಲಿ ʻಬಿಗ್ ಬಾಸ್ʼದೇ ಮೇಲುಗೈ; 6ನೇ ಸ್ಥಾನಕ್ಕೆ ಕುಸಿದ ʻಸೀತಾ ರಾಮʼ

geetha serial Dhanush gowda engagement
ಕಿರುತೆರೆ5 months ago

Dhanush Gowda: ಗೀತಾ ಧಾರಾವಾಹಿ ನಟನ ನಿಶ್ಚಿತಾರ್ಥ; ಭವ್ಯಾಳ ಕಮೆಂಟ್‌ ಬಾಕ್ಸ್‌ ಆಫ್‌!

varun
ಕಿರುತೆರೆ6 months ago

Brindavana Serial: ʼಬೃಂದಾವನʼ ಧಾರಾವಾಹಿಯಲ್ಲಿ ದೊಡ್ಡ ಟ್ವಿಸ್ಟ್‌; ಪ್ರಮುಖ ಪಾತ್ರಧಾರಿಯೇ ಬದಲು

Kannada Serials
ಕಿರುತೆರೆ8 months ago

Kannada Serials TRP: ಟಿಆರ್‌ಪಿಯಲ್ಲಿ ಏರಿಕೆ ಕಂಡ ʻಅಮೃತಧಾರೆʼ; ʻಗಟ್ಟಿಮೇಳʼಕ್ಕೆ ನಾಲ್ಕನೇ ಸ್ಥಾನ!

Prajwal Revanna case Revanna bail plea to be heard on Monday Advocate Nagesh argument was as follows
ಕ್ರೈಂ2 hours ago

Prajwal Revanna Case: ರೇವಣ್ಣ ಜಾಮೀನು ಅರ್ಜಿ ಸೋಮವಾರಕ್ಕೆ: ಎಸ್‌ಐಟಿಗೆ ಹಿಗ್ಗಾಮುಗ್ಗಾ ತರಾಟೆ; ವಕೀಲ ನಾಗೇಶ್‌ ವಾದ ಹೀಗಿತ್ತು!

Prajwal Revanna Case Hasanambe is going to destroy this government HD Kumaraswamy curse
ರಾಜಕೀಯ3 hours ago

Prajwal Revanna Case: ಈ ಸರ್ಕಾರವನ್ನು ಹಾಸನಾಂಬೆ ಧ್ವಂಸ ಮಾಡಲಿದ್ದಾಳೆ: ಎಚ್‌ಡಿಕೆ ಶಾಪ

Prajwal Revanna Case DK Shivakumar alleged mastermind in 25000 pen drive allotment
ಹಾಸನ4 hours ago

Prajwal Revanna Case: 25,000 ಪೆನ್ ಡ್ರೈವ್ ಹಂಚಿಕೆಯಲ್ಲಿ ಡಿ.ಕೆ. ಶಿವಕುಮಾರ್ ಮಾಸ್ಟರ್ ಮೈಂಡ್ ಎಂದು ರಾಜ್ಯಪಾಲರಿಗೆ ದೂರು!

SSLC Result 2024 what is the reason for most of the students fail in SSLC
ಕರ್ನಾಟಕ10 hours ago

SSLC Result 2024: ಎಸ್‌ಎಸ್‌ಎಲ್‌ಸಿಯಲ್ಲಿ ಹೆಚ್ಚಿನ ಮಕ್ಕಳು ಫೇಲ್‌ ಆಗಲು ಶಿಕ್ಷಣ ಇಲಾಖೆಯ ಈ ನಿರ್ಧಾರವೇ ಕಾರಣ!

Sslc exam Result 2024
ಶಿಕ್ಷಣ11 hours ago

SSLC Result 2024 : ಎಸ್‌ಎಸ್‌ಎಲ್‌ಸಿ ಪರೀಕ್ಷೆಯಲ್ಲಿ ಫೇಲಾದರೂ, ಕಡಿಮೆ ಅಂಕ ಬಂದರೂ ಡೋಂಟ್‌ ವರಿ; ಇನ್ನೂ ಇದೆ ಎರಡು ಚಾನ್ಸ್‌!

SSLC Result 2024 secret behind 20 percent grace marks
ಕರ್ನಾಟಕ11 hours ago

SSLC Result 2024: ಎಸ್‌ಎಸ್‌ಎಲ್‌ಸಿಯಲ್ಲಿ ಈ ಬಾರಿ ನೂರಕ್ಕೆ 25 ಅಂಕ ಪಡೆದವರೂ ಪಾಸ್! ಶೇ. 20 ಗ್ರೇಸ್ ಮಾರ್ಕ್ಸ್ ಕೊಟ್ಟಿದ್ದರ ಹಿಂದಿದೆ ಇಂಟರೆಸ್ಟಿಂಗ್ ಕತೆ!

SSLC Result 2024 78 schools get zero results in SSLC exams
ಬೆಂಗಳೂರು11 hours ago

SSLC Result 2024: ಎಸ್‌ಎಸ್‌ಎಲ್‌ಸಿ ಎಕ್ಸಾಂನಲ್ಲಿ ಸಿಕ್ಸರ್‌ ಬಾರಿಸಿದ ಗ್ರಾಮೀಣ ಪ್ರತಿಭೆಗಳು; 78 ಶಾಲೆಗಳಲ್ಲಿ ಶೂನ್ಯ ರಿಸಲ್ಟ್‌!

SSLC Result 2024 SSLC students get 20 percent grace marks but result is very poor
ಶಿಕ್ಷಣ12 hours ago

SSLC Result 2024: ಎಸ್‌ಎಸ್‌ಎಲ್‌ಸಿ ಮಕ್ಕಳಿಗೆ ಸಿಕ್ತು 20 ಪರ್ಸೆಂಟ್ ಗ್ರೇಸ್ ಮಾರ್ಕ್ಸ್‌! ಆದ್ರೂ ಫಲಿತಾಂಶ ತೀರಾ ಕಳಪೆ

SSLC Exam Result 2024 Announce
ಬೆಂಗಳೂರು13 hours ago

SSLC Result 2024: ಎಸ್‌ಎಸ್‌ಎಲ್‌ಸಿ ಫಲಿತಾಂಶ ಪ್ರಕಟ; ಶೇ. 73.40 ವಿದ್ಯಾರ್ಥಿಗಳು ಪಾಸ್‌, ಉಡುಪಿ ಫಸ್ಟ್‌, ಯಾದಗಿರಿ ಲಾಸ್ಟ್‌

Dina Bhavishya
ಭವಿಷ್ಯ2 days ago

Dina Bhavishya : ಅಮಾವಾಸ್ಯೆ ದಿನ ಈ ರಾಶಿಯವರಿಗೆ ಅದೃಷ್ಟ; ಹಣ ಗಳಿಕೆಗೆ ಪುಷ್ಟಿ

ಟ್ರೆಂಡಿಂಗ್‌