Parliament Election : ಮೈಸೂರಲ್ಲಿ ನನ್ನನ್ನು ಬಿಟ್ಟು ಯಾರಿದ್ದಾರೆ?; ಟಿಕೆಟ್‌ ಮಿಸ್ಸಾಗಲ್ಲ ಎಂದ ಪ್ರತಾಪಸಿಂಹ - Vistara News

ರಾಜಕೀಯ

Parliament Election : ಮೈಸೂರಲ್ಲಿ ನನ್ನನ್ನು ಬಿಟ್ಟು ಯಾರಿದ್ದಾರೆ?; ಟಿಕೆಟ್‌ ಮಿಸ್ಸಾಗಲ್ಲ ಎಂದ ಪ್ರತಾಪಸಿಂಹ

Parliament Election : ಮೈಸೂರಿನಲ್ಲಿ ನಾನು ಮಾಡಿದಷ್ಟು ಕೆಲಸವನ್ನು ಇತಿಹಾಸದಲ್ಲಿ ಯಾರೂ ಮಾಡಿಲ್ಲ. ನನ್ನ ಹೆಸರು ಕೇಳಿದರೇ ಕಾಂಗ್ರೆಸ್‌ ನಡುಗುತ್ತದೆ. ನನ್ನನ್ನು ಬಿಟ್ಟು ಬೇರೆ ಯಾರಿದ್ದಾರೆ.. ಹೀಗೆ ಆತ್ಮವಿಶ್ವಾಸದಿಂದ ಮಾತಮಾಡಿದ್ದಾರೆ ಸಂಸದ ಪ್ರತಾಪ್‌ಸಿಂಹ.

VISTARANEWS.COM


on

Parliament-Elections-Pratapsimha
ಮಹತ್ವದ, ಕುತೂಹಲಕರ ಸುದ್ದಿಗಾಗಿ ಫಾಲೊ ಮಾಡಿ
Koo

ಮೈಸೂರು: ನಾನು ಮೈಸೂರು- ಕೊಡಗು ಕ್ಷೇತ್ರದಲ್ಲಿ (Mysore Kodadu Constituency) ಗೆದ್ದರೆ ಸಿಎಂ ಸಿದ್ದರಾಮಯ್ಯ ಸೀಟು ಅಲುಗಾಡುತ್ತದೆ. ಆ ಮಟ್ಟದ ಹವಾ ಇದೆ. ನಾನು ಸಂಸದನಾಗಿ ಯಾರೂ ಮಾಡದಷ್ಟು ಕೆಲಸ ಮಾಡಿದ್ದೇನೆ. ಹೀಗಾಗಿ ನನಗೆ ಟಿಕೆಟ್‌ ನೀಡಿಯೇ ನೀಡುತ್ತಾರೆ ಎಂದು ಆತ್ಮವಿಶ್ವಾಸದಿಂದ ಹೇಳಿದ್ದಾರೆ ಮೈಸೂರು-ಕೊಡಗು ಸಂಸದ ಪ್ರತಾಪ್‌ ಸಿಂಹ (MP Pratapsimha) ಅವರು.

ಪ್ರತಾಪ್‌ ಸಿಂಹ ಅವರು ಉತ್ತಮ ಕೆಲಸಗಾರರೇ ಆದರೂ ಪಕ್ಷದೊಳಗೆ ವಿರೋಧ ಕಟ್ಟಿಕೊಂಡಿದ್ದಾರೆ, ಆರೆಸ್ಸೆಸ್‌ನ ಬೆಂಬಲವೂ ಇಲ್ಲ. ಲೋಕಸಭಾ ಚುನಾವಣೆಯ (Parliament Election) ಸಮೀಕ್ಷಾ ವರದಿಗಳು ಅವರ ಪರವಾಗಿಲ್ಲ. ಹೀಗಾಗಿ ಈ ಬಾರಿ ಅವರಿಗೆ ಪಕ್ಷ ಟಿಕೆಟ್‌ ನೀಡುವುದು ಡೌಟ್‌. ಅವರ ಬದಲಿಗೆ ಮೈಸೂರು ಒಡೆಯರಾದ ಯದುವೀರ್‌ ಒಡೆಯರ್‌ (Yaduveer Odeyar) ಅವರಿಗೆ ಟಿಕೆಟ್‌ ನೀಡಬಹುದು ಎಂಬ ಸುದ್ದಿ ಜೋರಾಗಿ ಓಡುತ್ತಿದೆ. ಈ ಎಲ್ಲ ವಿಚಾರಗಳ ಬಗ್ಗೆ, ಟಿಕೆಟ್‌ ಗೊಂದಲದ ಬಗ್ಗೆ ಪ್ರತಾಪ್‌ ಸಿಂಹ ಅವರು ಮಾತನಾಡಿದ್ದಾರೆ.

ಟಿಕೆಟ್‌ ನನಗೇ ಯಾಕೆ? ಪ್ರತಾಪ್‌ ಸಿಂಹ ಸಮರ್ಥನೆ ಹೀಗಿದೆ.

1. ಸಂಸದರ ಟಿಕೆಟ್ ನಿರ್ಧಾರ ಮಾಡೋದು ಜನ. ರಾಜ್ಯದಲ್ಲಿ 28 ಮಂದಿ ಸಂಸದರು ಇದ್ದಾರೆ. ಪರ್‌‌ಫಾರ್ಮೆನ್ಸ್ ನೋಡಿ ಟಿಕೆಟ್ ನೀಡುತ್ತಾರೆ.. ಜನ ಖುಷಿಯಾಗಿದ್ದಾರೆ ಅಂದ್ರೆ ಮೇಲಿನವರು ಅದೇ ನಿರ್ಧಾರ ಮಾಡ್ತಾರೆ.

2. ಮೈಸೂರಿನಲ್ಲಿ ನಾನು ಇಂಥ ಕೆಲಸ ಮಾಡಿಲ್ಲ ಎಂದು ಹೇಳಲಿ. ಮೈಸೂರಿನಲ್ಲಿ ಯಾರೂ ಮಾಡಿರದಷ್ಟು ಅಭಿವೃದ್ಧಿ ಕೆಲಸಗಳನ್ನು ಮಾಡಿದ್ದೇನೆ. ಬೃಹತ್ ಮೈಸೂರು ಮಾಡಲು ನಾನು ಹೊರಟಿದ್ದೇನೆ. ಹಲವು ಅಭಿವೃದ್ಧಿ ಯೋಜನೆಗಳನ್ನು ನಾನು ಮಾಡಿದ್ದೇನೆ. ಕರ್ನಾಟಕ ಆಳಿದವರಿಂದಲೂ ಔಟರ್ ರಿಂಗ್‌ರೋಡ್ ತರಲು ಆಗಿಲ್ಲ. ನಾನು ರಾಜ್ಯದಲ್ಲಿ ಮೊದಲಾಗಿ ಮೈಸೂರಿಗೆ ಮೊದಲ ಪೆರಿಫೆರಲ್ ರಿಂಗ್ ರೋಡ್ ತರಲು ಹೊರಟಿದ್ದೇನೆ.

ಇದನ್ನೂ ಓದಿ : Parliament Election : ಪ್ರತಾಪ್‌ಸಿಂಹಗೆ ಮಿಸ್‌ ಆಗುತ್ತಾ ಮೈಸೂರು ಟಿಕೆಟ್‌; ಯದುವೀರ್‌ಗೆ ಅವಕಾಶ?

3. ಯಾರೋ ಒಂದಷ್ಟು ಜನ ಅಸೂಯೆಗೆ ಮಾತನಾಡುತ್ತಾರೆ. ಕೆಲಸವೇ ನನಗೆ ಶ್ರೀರಕ್ಷೆ. ಮೈಸೂರು ಕೊಡಗು ಜನರು ನನ್ನ ಕೈ ಹಿಡಿಯುತ್ತಾರೆ. ಕಾಯಲು ಬೆಟ್ಟದ ಮೇಲೆ ಒಬ್ಬಳು ತಾಯಿ ಇದ್ದಾಳೆ. ತಾಯಿ ಚಾಮುಂಡಿ ನನ್ನ ಕೈ ಬಿಡಲ್ಲ.

4. ಹಿಂದೂತ್ವದ ಪರ ನಾನು ಕೆಲಸ ಮಾಡಿದ್ದೇನೆ. ಹಿಂದೂ ಕಾರ್ಯಕರ್ತರಿಗೆ ಅನ್ಯಾಯವಾದಾಗ ನಿಂತಿದ್ದು ನಾನು. ಬಿಜೆಪಿ ಕಾರ್ಯಕರ್ತರು ಖುಷಿ ಪಡುವ ಎಂಪಿ ಇದ್ರೆ ಅದು ನಾನೇ. ಈ ವಿಚಾರವಾಗಿ ಪ್ರತಾಪ್ ಸಿಂಹ ಎರಡು ಕೇಸ್ ಹಾಕಿಸಿಕೊಂಡಿದ್ದಾನೆ. ಈ ಭಾಗದಲ್ಲಿ ಹನುಮ ಜಯಂತಿ ಆಗುತ್ತಿದ್ರೆ ಅಂದ್ರೆ ಅದಕ್ಕೆ ಪ್ರತಾಪ್ ಸಿಂಹ ಕಾರಣ.

5.ಎಲ್ಲರಿಗೂ ಟಿಕೆಟ್ ಕೇಳುವ ಹಕ್ಕಿದೆ. 10 ವರ್ಷ ನಿಯತ್ತಾಗಿ ಕೆಲಸ ಮಾಡಿದ್ದೇನೆ. ಚಾಲೆಂಜಿಂಗ್ ಮಾಡಿ ಹೇಳ್ತೀನಿ ನನ್ನ ರೀತಿ ಕೆಲಸ ಯಾರು ಮಾಡಿಲ್ಲ. ಈ ಬಾರಿಯೂ ನಾನು 2 ರಿಂದ 3 ಲಕ್ಷ ಮತಗಳಿಂದ ಗೆಲ್ಲುತ್ತೇನೆ. ಜನರು ನನ್ನ ಕೈ ಹಿಡಿಯಲು ರೆಡಿ ಇದ್ದಾರೆ. ಪಕ್ಷ ನನ್ನ ಕೈ ಬಿಡಲ್ಲ ಎಂಬ ನಂಬಿಕೆ ಇದೆ.

6. ರಾಜಕೀಯದಲ್ಲಿ ದ್ವೇಷ ಅಸೂಯೆ ಇದ್ದೆ ಇರುತ್ತೆ. ಪ್ರೀತಿಸುವವರು ಅಷ್ಟೇ ಪ್ರಮಾಣದಲ್ಲಿ ಇದ್ದಾರೆ. ಮೈಸೂರು ಕೊಡಗು ಜನರ ಪ್ರೀತಿಯ ನಡುವೆ ಅಸೂಯೆ ಯಾವುದು ನಿಲ್ಲಲ್ಲ. ಪಾರ್ಟಿಯ ಕಾರ್ಯಕರ್ತರು ಯಾರು ಅಭ್ಯರ್ಥಿ ಆಗಬೇಕೆಂದು ಹೇಳಿದ್ದಾರೆ. ಅದರ ಶೀಟ್ ನೋಡಿದ್ರೆ ಗೊತ್ತಾಗುತ್ತೆ.

7. ಪ್ರತಾಪ್ ಸಿಂಹ ರೂಲರ್ ಅಲ್ಲ, ಕೆಲಸಗಾರ. ಜನರಿಗೆ ರೂಲರ್ ಬೇಡಾ, ಬೇಕಿರೋದು ಕೆಲಸಗಾರ. ಪತ್ರಕರ್ತನಾಗಿದ್ದವನನ್ನು ಎರಡು ಬಾರಿ ಎಂಪಿ ಮಾಡಿದ್ದು ಬಿಜೆಪಿ.

8. ಕಾಂಗ್ರೆಸ್ ಅವರಿಗೆ ಅಭ್ಯರ್ಥಿ ಹುಡುಕಲು ಆಗ್ತಾ ಇಲ್ಲ. ಇದರಿಂದ ಪ್ರತಾಪ್ ಸಿಂಹ ಶಕ್ತಿ ಏನು ಅಂತಾ ಕಾಂಗ್ರೆಸ್ ಅವರಿಗೆ ಗೊತ್ತಿದೆ. ನಾನು ಗೆದ್ದರೆ ಸಿದ್ದರಾಮಯ್ಯ ಅವರ ಸೀಟು ಅಲುಗಾಡುತ್ತೆ. ಪ್ರತಾಪ್ ಸಿಂಹ ಸೋಲಿಸಲು ಆಗಲ್ಲ ಎಂದು ಕಾಂಗ್ರೆಸ್‌ಗೆ ಗೊತ್ತಿದೆ.

ಕ್ಷಣ ಕ್ಷಣದ ಮಾಹಿತಿಗಾಗಿ Vistara News FaceBook ಪೇಜ್ ಫಾಲೋ ಮಾಡಿ
ಮಹತ್ವದ ಮಾಹಿತಿಗಾಗಿ ವಿಸ್ತಾರ ನ್ಯೂಸ್ ಆ್ಯಪ್ ಉಚಿತವಾಗಿ ಡೌನ್ ಲೋಡ್ ಮಾಡಿಕೊಳ್ಳಿ: Andriod App | IOS App
Continue Reading
Click to comment

Leave a Reply

Your email address will not be published. Required fields are marked *

ದೇಶ

PM Narendra Modi:”ಅಬ್ಬಾ.. ಎಂಥಾ ಮೇಕಪ್!”- ಮತ್ತೆ ಗಮನ ಸೆಳೆದ ಮೋದಿ; ವಿಡಿಯೋ ವೈರಲ್‌

PM Narendra Modi: ಜೌನ್‌ಪುರದಲ್ಲಿ ನಡೆದ ಸಾರ್ವಜನಿಕ ಸಭೆಯನ್ನುದ್ದೇಶಿಸಿ ಭಾಷಣ ಮಾಡುತ್ತಿದ್ದಾಗ ಸಭೆಯಲ್ಲಿದ್ದ ಮೋದಿ ಹಾಗೂ ಉತ್ತರಪ್ರದೇಶ ಸಿಎಂ ಯೋಗಿ ಆದಿತ್ಯಾನಾಥ್‌ ಅವರ ವೇಷ ತೊಟ್ಟಿದ್ದ ಇಬ್ಬರು ಬಾಲಕರನ್ನು ಗುರುತಿಸಿದ ಪ್ರಧಾನಿ ನರೇಂದ್ರ ಮೋದಿ, ʼʼಯೇ ಕ್ಯಾ ಬಡಿಯಾ ಮೇಕ್‌ ಅಪ್‌ ಕಿಯಾ ಹೇ(ಅಬ್ಬಾ ಎಂಥಾ ಮೇಕಪ್‌ ಮಾಡಿದ್ದೀರಿ)” ಎಂದು ಮೆಚ್ಚುಗೆ ವ್ಯಕ್ತಪಡಿಸುವ ಮೂಲಕ ಗಮನ ಸೆಳೆದಿದ್ದಾರೆ.

VISTARANEWS.COM


on

PM Narendra Modi
Koo

ಉತ್ತರಪ್ರದೇಶ: ಪ್ರಧಾನಿ ನರೇಂದ್ರ ಮೋದಿ(PM Narendra Modi) ತಮ್ಮ ಚುನಾವಣಾ ಪ್ರಚಾರ(Lok Sabha Elction 2024)ದ ವೇಳೆ, ರ್ಯಾಲಿಗಳಲ್ಲಿ ಅದೆಷ್ಟು ಅಬ್ಬರದ ಭಾಷಣದಲ್ಲಿ ತೊಡಗಿದ್ದರೂ ಎದುರಿಗೆ ನೆರೆದಿರುವ ಜನರ ಮೇಲೆ ಪ್ರತ್ಯೇಕ ಗಮನ ಇದ್ದೇ ಇರುತ್ತದೆ. ಕೆಲವೊಮ್ಮೆ ಸಭಿಕರ ನಡುವೆ ಏನಾದರೂ ವಿಚಾರಗಳು ಕಂಡು ಬಂದಲ್ಲಿ ತಕ್ಷಣ ಅಲ್ಲೇ ಅದಕ್ಕೆ ಪ್ರತಿಕ್ರಿಯಿಸಿ ಗಮನ ಸೆಳೆದದ್ದೂ ಇದೆ. ಇದೀಗ ಮತ್ತೆ ಅಂತಹದ್ದೇ ಒಂದು ಘಟನೆ ಉತ್ತರಪ್ರದೇಶದಲ್ಲಿ ನಡೆದಿದೆ.

ಜೌನ್‌ಪುರದಲ್ಲಿ ನಡೆದ ಸಾರ್ವಜನಿಕ ಸಭೆಯನ್ನುದ್ದೇಶಿಸಿ ಭಾಷಣ ಮಾಡುತ್ತಿದ್ದಾಗ ಸಭೆಯಲ್ಲಿದ್ದ ಮೋದಿ ಹಾಗೂ ಉತ್ತರಪ್ರದೇಶ ಸಿಎಂ ಯೋಗಿ ಆದಿತ್ಯಾನಾಥ್‌ ಅವರ ವೇಷ ತೊಟ್ಟಿದ್ದ ಇಬ್ಬರು ಬಾಲಕರನ್ನು ಗುರುತಿಸಿದ ಪ್ರಧಾನಿ ನರೇಂದ್ರ ಮೋದಿ, ʼʼಯೇ ಕ್ಯಾ ಬಡಿಯಾ ಮೇಕ್‌ ಅಪ್‌ ಕಿಯಾ ಹೇ(ಅಬ್ಬಾ ಎಂಥಾ ಮೇಕಪ್‌ ಮಾಡಿದ್ದೀರಿ)” ಎಂದು ಮೆಚ್ಚುಗೆ ವ್ಯಕ್ತಪಡಿಸುವ ಮೂಲಕ ಗಮನ ಸೆಳೆದಿದ್ದಾರೆ.

ಬಿಜೆಪಿ ಅಭ್ಯರ್ಥಿಗಳಾದ ಕೃಪಾ ಶಂಕರ್‌ ಸಿಂಗ್‌ ಮತ್ತು ಬಿಪಿ ಸರೋಜ್‌ ಪರ ಪ್ರಚಾರ ಕಾರ್ಯದಲ್ಲಿ ಭಾಗಿಯಾಗಿ ಮಾತನಾಡಿದ ಅವರು, ಮುಂದಿನ ಐದು ವರ್ಷಗಳಲ್ಲಿ ಸಿಎಂ ಯೋಗಿ ಅವರ ಸಹಕಾರದೊಂದಿಗೆ ಇದೀ ಪೂರ್ವಾಂಚಲ ಪ್ರದೇಶದಲ್ಲಿ ಬದಲಾವಣೆ ಗಾಳಿ ಬೀಸಲಿದೆ ಎಂದು ವಿಶ್ವಾಸ ವ್ಯಕ್ತಪಡಿಸಿದೆ. ಈ ವೇಳೆ ಅವರು ಸಭೆಯ ನಡುವೆ ವಿಶೇಷ ಉಡುಗೆ ತೊಡುಗೆಯಲ್ಲಿ ಮಿಂಚುತ್ತಿದ್ದ ಇಬ್ಬರು ಬಾಲಕರನ್ನು ಗಮನಿಸಿ ಪ್ರಧಾನಿ ಮೆಚ್ಚುಗೆ ವ್ಯಕ್ತಪಡಿಸಿದ್ದಾರೆ.

ಕಾನೂನು ಸುವ್ಯವಸ್ಥೆ ಜಾರಿ ಕುರಿತು ಉತ್ತರ ಪ್ರದೇಶ ಮುಖ್ಯಮಂತ್ರಿಯನ್ನು ಶ್ಲಾಘಿಸಿದ ಮೋದಿ, “ನೀವು ಸಮಾಜವಾದಿ ಪಾರ್ಟಿಯ ʼಗೂಂಡಾರಾಜ್’ನ ಹಳೆಯ ದಿನಗಳನ್ನು ನೋಡಿದ್ದೀರಿ. ಯೋಗಿಜಿ ನನ್ನ ʼಸ್ವಚ್ಛತಾ ಅಭಿಯಾನ’ವನ್ನು ಸರಿಯಾಗಿ ಜಾರಿಗೆ ತಂದಿದ್ದಾರೆ. ಉತ್ತರ ಪ್ರದೇಶದಲ್ಲಿ ಇದ್ದ ಗ್ಯಾಂಗ್‌ಗಳು, ಗಲಭೆಕೋರರು, ಮಾಫಿಯಾಗಳು, ಅಪಹರಣಕಾರರು ಮತ್ತು ಸುಲಿಗೆಕೋರರ ವಿರುದ್ಧ ಕಠಿಣ ಕ್ರಮ ಜರುಗಿಸಿದ್ದಾರೆ” ಎಂದಿದ್ದಾರೆ.

“ಹತ್ತು ವರ್ಷಗಳ ಹಿಂದೆ ಇಲ್ಲಿ ಜನರು ದೇವರ ಭರವಸೆಯಲ್ಲಿ ಬದುಕುತ್ತಿದ್ದರು. ಕೆಲವು ಕಡೆ ಬಾಂಬ್ ದಾಳಿ, ಕೆಲವು ಕಡೆ ಸ್ಲೀಪರ್ ಸೆಲ್, ಕೆಲವು ಕಡೆ ಕೋಮು ಘರ್ಷಣೆ, ಇನ್ನು ಕೆಲವು ಕಡೆ ಭಯೋತ್ಪಾದನೆಯಿಂದ ಸಂಕಷ್ಟ ಪರಿಸ್ಥಿತಿ ಇತ್ತು. ಸಾವಿರಾರು ತಾಯಂದಿರು ತಮ್ಮ ಮಕ್ಕಳನ್ನು ಕಳೆದುಕೊಂಡರು. ಈ ಹಿಂದಿನ ಸರ್ಕಾರಗಳು ಅಂತಹ ದುಷ್ಟರಿಗೆ ಸಹಕಾರ ನೀಡುತ್ತಿದ್ದವು” ಎಂದರು ಮೋದಿ.

“ಈಗಲೂ ನಿಮ್ಮ ಮೀಸಲಾತಿಯನ್ನು ಕಿತ್ತು ಸಮುದಾಯವೊಂದಕ್ಕೆ ನೀಡಲು ಆ ಪಕ್ಷಗಳು ಚಿಂತಿಸಿವೆ. ಬಜೆಟ್ 15% ಅಲ್ಪಸಂಖ್ಯಾತರ ಹೆಸರಿನಲ್ಲಿ ಹೋಗುತ್ತಿದೆ. 70 ವರ್ಷಗಳಿಂದ ಹಿಂದೂ ಮುಸ್ಲಿಂ ರಾಜಕೀಯ ಮಾಡಿವೆ. ನಾವು ಒಂದಾಗಿ ಹೋಗಬೇಕು, ದೇಶವನ್ನು ಅಭಿವೃದ್ಧಿಯತ್ತ ಕೊಂಡೊಯ್ಯಬೇಕು” ಎಂದರು ನುಡಿದರು.

ಇದನ್ನೂ ಓದಿ:Lok Sabha Election 2024: ನಾಲ್ಕು ಹಂತಗಳ ಮತದಾನ ಅಂತ್ಯ; ಕಾಂಗ್ರೆಸ್ ಆಂತರಿಕ ವರದಿಯಲ್ಲೇನಿದೆ?

“ಸಿಎಎ ಅಡಿಯಲ್ಲಿ ನಿರಾಶ್ರಿತರಿಗೆ ಪೌರತ್ವ ನೀಡುವ ಕೆಲಸ ಈಗಾಗಲೇ ಪ್ರಾರಂಭವಾಗಿದೆ. ಇವರು ದೇಶದಲ್ಲಿ ನಿರಾಶ್ರಿತರಾಗಿ ದೀರ್ಘಕಾಲ ವಾಸಿಸಿದ್ದಾರೆ. ಇವರು ಧರ್ಮದ ಆಧಾರದ ಮೇಲೆ ಮಾಡಿದ ದೇಶ ವಿಭಜನೆಗೆ ಬಲಿಯಾದವರು. ಆದರೆ ವಿರೋಧ ಪಕ್ಷಗಳಾದ ಎಸ್‌ಪಿ ಮತ್ತು ಕಾಂಗ್ರೆಸ್ ಕಾನೂನಿನ ಬಗ್ಗೆ ತಪ್ಪು ಮಾಹಿತಿಯನ್ನು ಹರಡುವ ಮೂಲಕ ಗಲಭೆಗಳನ್ನು ಪ್ರಚೋದಿಸುತ್ತಿವೆ. ಈ ನಿರಾಶ್ರಿತರನ್ನು ಕಾಂಗ್ರೆಸ್ ನಿರ್ಲಕ್ಷಿಸಿದೆ. ಅವರು ಉತ್ತರ ಪ್ರದೇಶ ಮತ್ತು ಇಡೀ ದೇಶದಲ್ಲಿ ಗಲಭೆಯನ್ನು ಸೃಷ್ಟಿಸಲು ಪ್ರಯತ್ನಿಸಿದರು” ಎಂದು ಮೋದಿ ಆರೋಪಿಸಿದರು.

Continue Reading

ಕ್ರೈಂ

Prajwal Revanna Case: ಹಾಸನ, ಬೆಂಗಳೂರು ದಾಳಿ ವೇಳೆ ಸಿಕ್ಕ ಪೆನ್‌ಡ್ರೈವ್‌, ಹಾರ್ಡ್‌ ಡಿಸ್ಕ್‌ ಎಷ್ಟು? ಎಫ್‌ಎಸ್‌ಎಲ್‌ಗೆ ರವಾನೆ

Prajwal Revanna Case: ಪ್ರಜ್ವಲ್‌ ರೇವಣ್ಣ ಕೇಸ್‌ಗೆ ಸಂಬಂಧಪಟ್ಟಂತೆ ಮಾಜಿ ಶಾಸಕ ಪ್ರೀತಂ ಗೌಡ ಆಪ್ತರು ಹಾಗೂ ಬಂಧಿತರಾಗಿರುವ ಇಬ್ಬರಿಗೆ ಸೇರಿದ ಹಾಸನ ಮತ್ತು ಬೆಂಗಳೂರಿನ ಕೆಲವು ಸ್ಥಳಗಳಲ್ಲಿ ದಾಳಿ ನಡೆಸಿದ್ದ ಎಸ್ಐಟಿ ಹತ್ತು ಪೆನ್ ಡ್ರೈವ್ ಮತ್ತು ಒಂದು ಹಾರ್ಡ್ ಡಿಸ್ಕ್ ಅನ್ನು ವಶಕ್ಕೆ ತೆಗೆದುಕೊಂಡಿದೆ. ಇವುಗಳನ್ನು ಎಫ್‌ಎಸ್‌ಎಲ್‌ ವರದಿಗಾಗಿ ಕಳುಹಿಸಲಾಗಿದೆ. ಅಲ್ಲಿಂದ ವರದಿ ಬಂದ ಬಳಿಕ ಮುಂದಿನ ತೀರ್ಮಾನವನ್ನು ತೆಗೆದುಕೊಳ್ಳಲು ಎಸ್‌ಐಟಿ ನಿರ್ಧರಿಸಿದೆ. ಇದು ಮೂಲ ಕಾಪಿಯೇ? ಅಥವಾ ಒಬ್ಬರಿಂದ ಒಬ್ಬರಿಗೆ ಹಂಚಿಕೆ ಆಗಿರುವುದೇ ಎಂಬ ನಿಟ್ಟಿನಲ್ಲಿ ಎಫ್‌ಎಸ್‌ಎಲ್‌ನಲ್ಲಿ ಪರಿಶಿಲನೆ ನಡೆಸಲಾಗುತ್ತದೆ.

VISTARANEWS.COM


on

Prajwal Revanna Case pen drive and hard disk were found during the raids in Hassan and Bengaluru
Koo

ಬೆಂಗಳೂರು: ಪ್ರಜ್ವಲ್‌ ರೇವಣ್ಣ (Prajwal Revanna Case) ಅವರದ್ದು ಎನ್ನಲಾದ ಅಶ್ಲೀಲ ವಿಡಿಯೊ (Absence video) ಪ್ರಕರಣಕ್ಕೆ ಸಂಬಂಧಿಸಿದಂತೆ ಹಾಸನ ಹಾಗೂ ಬೆಂಗಳೂರಿನ ಹಲವು ಕಡೆ ಎಸ್ಐಟಿ ದಾಳಿ ನಡೆಸಿದ್ದ ವೇಳೆ ಹತ್ತು ಪೆನ್ ಡ್ರೈವ್, ಒಂದು ಹಾರ್ಡ್ ಡಿಸ್ಕ್ ಪತ್ತೆಯಾಗಿದೆ. ಈಗ ಈ ಎಲ್ಲವನ್ನೂ ಎಫ್ಎಸ್ಎಲ್‌ಗೆ ಕಳುಹಿಸಲಾಗಿದೆ.

ಪ್ರಜ್ವಲ್‌ ರೇವಣ್ಣ ಕೇಸ್‌ಗೆ ಸಂಬಂಧಪಟ್ಟಂತೆ ಮಾಜಿ ಶಾಸಕ ಪ್ರೀತಂ ಗೌಡ ಆಪ್ತರು ಹಾಗೂ ಬಂಧಿತರಾಗಿರುವ ಇಬ್ಬರಿಗೆ ಸೇರಿದ ಹಾಸನ ಮತ್ತು ಬೆಂಗಳೂರಿನ ಕೆಲವು ಸ್ಥಳಗಳಲ್ಲಿ ದಾಳಿ ನಡೆಸಿದ್ದ ಎಸ್ಐಟಿ ಹತ್ತು ಪೆನ್ ಡ್ರೈವ್ ಮತ್ತು ಒಂದು ಹಾರ್ಡ್ ಡಿಸ್ಕ್ ಅನ್ನು ವಶಕ್ಕೆ ತೆಗೆದುಕೊಂಡಿದೆ.

ಎಫ್‌ಎಸ್‌ಎಲ್‌ಗೆ ರವಾನೆ

ಈ ಎಲ್ಲ ಹತ್ತು ಪೆನ್ ಡ್ರೈವ್ ಮತ್ತು ಒಂದು ಹಾರ್ಡ್ ಡಿಸ್ಕ್ ಅನ್ನು ಎಫ್‌ಎಸ್‌ಎಲ್‌ ವರದಿಗಾಗಿ ಕಳುಹಿಸಲಾಗಿದೆ. ಅಲ್ಲಿಂದ ವರದಿ ಬಂದ ಬಳಿಕ ಮುಂದಿನ ತೀರ್ಮಾನವನ್ನು ತೆಗೆದುಕೊಳ್ಳಲು ಎಸ್‌ಐಟಿ ನಿರ್ಧರಿಸಿದೆ. ಇದು ಮೂಲ ಕಾಪಿಯೇ? ಅಥವಾ ಒಬ್ಬರಿಂದ ಒಬ್ಬರಿಗೆ ಹಂಚಿಕೆ ಆಗಿರುವುದೇ ಎಂಬ ನಿಟ್ಟಿನಲ್ಲಿ ಎಫ್‌ಎಸ್‌ಎಲ್‌ನಲ್ಲಿ ಪರಿಶಿಲನೆ ನಡೆಸಲಾಗುತ್ತದೆ.

ಸೆಕ್ಸ್‌ ಕೇಸಲ್ಲಿ ಎಕ್ಸ್‌ ಮಾನ್ಯತೆ ಕಳೆದುಕೊಂಡ ಪ್ರಜ್ವಲ್‌ ರೇವಣ್ಣ!

ಪ್ರಜ್ವಲ್‌ ರೇವಣ್ಣ (Prajwal Revanna Case) ಅವರದ್ದು ಎನ್ನಲಾದ ಅಶ್ಲೀಲ ವಿಡಿಯೊ (Absence video) ಪ್ರಕರಣಕ್ಕೆ ಸಂಬಂಧಿಸಿದಂತೆ ಸೋಷಿಯಲ್‌ ಮೀಡಿಯಾ ಎಕ್ಸ್‌ ಮಹತ್ವದ ತೀರ್ಮಾನವನ್ನು ತೆಗೆದುಕೊಂಡಿದೆ. ವೇರಿಫೈಡ್‌ ಅಕೌಂಟ್‌ ಸ್ಟೇಟಸ್‌ನಿಂದ ಪ್ರಜ್ವಲ್‌ ಹೊರಬಿದ್ದಿದ್ದಾರೆ. ಅವರಿಗಿದ್ದ ಬ್ಲ್ಯೂ ಟಿಕ್‌ ಮಾನ್ಯತೆ ಈಗ ಅಮಾನ್ಯಗೊಂಡಿದೆ.

ಸೋಷಿಯಲ್‌ ಮೀಡಿಯಾ ಎಕ್ಸ್‌ ಈ ಮೊದಲು ಟ್ವಿಟರ್‌ ಆಗಿತ್ತು. ಆಗಿನಿಂದಲೂ ಅಫೀಶಿಯಲ್‌ ಖಾತೆದಾರರಿಗೆ ಬ್ಲ್ಯೂ ಟಿಕ್‌ ಅನ್ನು ನೀಡಲಾಗುತ್ತಿತ್ತು. ಅದಕ್ಕೆ ಕೆಲವೊಂದಿಷ್ಟು ಪ್ರಕ್ರಿಯೆಗಳು ಇದ್ದವು. ಈ ಕಾರಣಕ್ಕೆ ಗಣ್ಯರು, ರಾಜಕಾರಣಿಗಳು, ಸಿನಿಮಾ ತಾರೆಯರು ಸೇರಿದಂತೆ ಹಲವರು ಈ ಬ್ಲ್ಯೂಟಿಕ್‌ ಅನ್ನು ಪಡೆದುಕೊಳ್ಳುತ್ತಿದ್ದರು. ಆದರೆ, ಎಲಾನ್‌ ಮಸ್ಕ್‌ ಟ್ವಿಟರ್‌ ಅನ್ನು ತನ್ನ ತೆಕ್ಕೆಗೆ ತೆಗೆದುಕೊಂಡ ನಂತರ ಹಲವು ಬದಲಾವಣೆಯನ್ನು ತಂದರು. ಬ್ಲ್ಯೂ ಟಿಕ್‌ ಬೇಕೆಂದರೆ ಹಣ ಪಾವತಿ ಮಾಡಬೇಕು ಎಂಬ ನಿಯಮವನ್ನು ಸಹ ತರಲಾಗಿದೆ. ಈಗ ಹಣ ಪಾವತಿ ಮಾಡಿಲ್ಲವೆಂದಾದರೆ ಅಥವಾ ಆ ಖಾತೆ ಬಗ್ಗೆ ದೂರುಗಳು ಬಂದರೆ ಬ್ಲ್ಯೂಟಿಕ್‌ ಅನ್ನು ವಾಪಸ್‌ ಪಡೆಯುವ ಅಧಿಕಾರವನ್ನು ಎಕ್ಸ್‌ ಹೊಂದಿದೆ. ಹೀಗಾಗಿ ಇಲ್ಲಿ ಪ್ರಜ್ವಲ್‌ ರೇವಣ್ಣ ಕೇಸ್‌ನಲ್ಲಿ ಏನಾಗಿದೆ ಎಂಬುದು ಸದ್ಯದ ಕುತೂಹಲವಾಗಿದೆ.

ಬ್ಲ್ಯೂ ಟಿಕ್‌ ಬೇಕೆಂದರೆ ದುಡ್ಡೆಷ್ಟು?

ಗ್ರಾಹಕರು ದುಡ್ಡು ಕೊಟ್ಟು ಈ ಬ್ಲ್ಯೂ ಟಿಕ್ ಮಾರ್ಕ್ ಖರೀದಿಸಬಹುದು. ಮೆಟಾ ವೆರಿಫೈಡ್ ಸಬ್ಸ್‌ಕ್ರಿಪ್ಷನ್ ಆಧಾರಿತ ಸೇವೆಯ ಅನ್ವಯ ಬಳಕೆದಾರರು ತಿಂಗಳಿಗೆ 699 ರೂ. ಪಾವತಿಸಿದರೆ ಬ್ಲೂ ಟಿಕ್ ದೊರೆಯಲಿದೆ. ಇದು ಫೇಸ್‌ಬುಕ್ ಮತ್ತು ಇನ್‌ಸ್ಟಾಗ್ರಾಮ್‌ ಎರಡಕ್ಕೂ ಅನ್ವಯವಾಗಲಿದೆ. ಆದರೆ, ಈಗ ಪ್ರಜ್ವಲ್‌ ಕೇಸ್‌ನಲ್ಲಿ ಯಾವ ಕಾರಣಕ್ಕೆ ಬ್ಲ್ಯೂಟಿಕ್‌ ಅನ್ನು ತೆಗೆಯಲಾಗಿದೆ ಎಂದು ಈವರೆಗೂ ಎಕ್ಸ್‌ ಸ್ಪಷ್ಟನೆ ನೀಡಿಲ್ಲ.

ವಿದೇಶಕ್ಕೆ ಹೋದ ಬಳಿಕ ಕೊನೆಯದಾಗಿ ಟ್ವೀಟ್‌ ಮಾಡಿದ್ದ ಪ್ರಜ್ವಲ್‌

ವಿದೇಶದಿಂದ ಬಾರದ ಪ್ರಜ್ವಲ್‌; ಜರ್ಮನಿಗೆ ಹೋಗುತ್ತಾ ಎಸ್‌ಐಟಿ ಟೀಂ? ಮುಂದಿನ ಆಯ್ಕೆ ಏನು?

ಪ್ರಜ್ವಲ್‌ ರೇವಣ್ಣ ದೇಶಬಿಟ್ಟು 19 ದಿನ ಕಳೆದಿದರೂ ಸುಳಿವಿಲ್ಲ. ಈಗಿನ ಪ್ರಕಾರ, ಸದ್ಯಕ್ಕೆ ಪ್ರಜ್ವಲ್ ವಾಪಸಾಗುವುದು ಅನುಮಾನ ಎನ್ನಲಾಗಿದೆ. ಹಾಗಾಗಿ ಎಸ್‌ಐಟಿ ಅಧಿಕಾರಿಗಳ ಮುಂದಿನ ನಡೆ ಏನು? ಬೇರೆ ದೇಶಕ್ಕೆ ಹೋಗಿ ಅವರನ್ನು ಬಂಧಿಸಿ ಕರೆತರಲು ಸಾಧ್ಯವಿದೆಯೇ? ಅದು ಸಾಧ್ಯವಿಲ್ಲವಾದರೆ ಬೇರೆ ಯಾವ ಮಾರ್ಗವಿದೆ? ಅಥವಾ ಪ್ರಜ್ವಲ್‌ ಬರುವವರೆಗೂ ಕಾಯುತ್ತಾ ಕೂರಬೇಕಾ ಎಂಬಿತ್ಯಾದಿ ಪ್ರಶ್ನೆಗಳು ಎದುರಾಗಿವೆ.

ಈಗಿನ ಮಾಹಿತಿ ಪ್ರಕಾರ ಹಾಗೂ ಗೃಹ ಸಚಿವ ಡಾ. ಜಿ. ಪರಮೇಶ್ವರ್‌ ಅವರ ಹೇಳಿಕೆಯನ್ನು ಗಮನದಲ್ಲಿಟ್ಟುಕೊಂಡು ನೋಡುವುದಾದರೆ ಸದ್ಯ ಎಸ್‌ಐಟಿ ತಂಡದವರು ಬೇರೆ ದೇಶಕ್ಕೆ ತೆರಳಿ ಪ್ರಜ್ವಲ್‌ ಅವರನ್ನು ಕರೆತರಲು ಸಾಧ್ಯವಿಲ್ಲ. ಇನ್ನು ಪ್ರಜ್ವಲ್‌ ಇಲ್ಲಿಂದ ಜರ್ಮನಿಗೆ ಫ್ಲೈಟ್‌ ಟಿಕೆಟ್‌ ಬುಕ್‌ ಮಾಡಿ ಹೋಗಿದ್ದಾರಾದರೂ ಅವರು ಜರ್ಮನಿಯಲ್ಲಿಯೇ ಇದ್ದಾರಾ? ಅಥವಾ ಅಲ್ಲಿಂದ ಬೇರೆ ದೇಶಕ್ಕೇನಾದರೂ ಹೋಗಿದ್ದಾರಾ ಎಂಬುದೂ ಖಾತ್ರಿಯಾಗಿಲ್ಲ. ಆದರೆ, ಅವರು ಜರ್ಮನಿಯಿಂದ ಬೆಂಗಳೂರಿಗೆ ಬರುವಂತೆ ಫ್ಲೈಟ್‌ ಟಿಕೆಟ್‌ ಅನ್ನು ಮಾತ್ರ ಬುಕ್‌ ಮಾಡುತ್ತಾ ಕುಳಿತಿದ್ದಾರೆ. ಕೊನೇ ಕ್ಷಣದಲ್ಲಿ ಫ್ಲೈಟ್‌ ಹತ್ತದೆ ಎಸ್‌ಐಟಿಗೆ ಚಳ್ಳೆಹಣ್ಣು ತಿನ್ನಿಸುತ್ತಿದ್ದಾರೆ. ಅದು ಬಿಟ್ಟರೆ ಇತ್ತ ಸುಳಿಯುವ ಯಾವುದೇ ಲಕ್ಷಣಗಳು ಸದ್ಯಕ್ಕಂತೂ ಗೋಚರಿಸುತ್ತಿಲ್ಲ.

ಹೀಗಾಗಿ ಮೊದಲು ಪ್ರಜ್ವಲ್ ಯಾವ ದೇಶದಲ್ಲಿದ್ದಾರೆ ಎಂಬ ಖಚಿತ ಮಾಹಿತಿಯನ್ನು ಕಲೆ ಹಾಕಬೇಕು. ಇಲ್ಲದೆ ಹೋದರೆ ಈಗಾಗಲೇ ಜಾರಿ ಮಾಡಲಾಗಿರುವ ಬ್ಲೂ ಕಾರ್ನರ್ ನೋಟಿಸ್‌ನಿಂದಾಗಿ ಯಾವ ದೇಶದಿಂದಾದರೂ ಮಾಹಿತಿ ಬರುತ್ತದೆಯೇ ಎಂಬುದನ್ನು ಕಾದು ನೋಡಬೇಕು. ಹೀಗಾಗಿ ಇಂಟರ್ ಪೋಲ್ ಅಧಿಕಾರಿಗಳಿಂದ ಮಾಹಿತಿ ಬರುವವರೆಗೂ ಕಾಯಲೇಬೇಕು.

ಇದನ್ನೂ ಓದಿ: HD Devegowda: 92ನೇ ವರ್ಷದ ಹುಟ್ಟುಹಬ್ಬ ಆಚರಿಸಿಕೊಳ್ಳಲ್ಲ ಎಂದ ಎಚ್‌ಡಿ ದೇವೇಗೌಡ; ಮೊಮ್ಮಗನ ಕೇಸ್‌ನಿಂದ ಈ ತೀರ್ಮಾನ?

ಪ್ರಜ್ವಲ್‌ ಇರುವ ದೇಶ ಗೊತ್ತಾದರೆ ಎಸ್‌ಐಟಿ ಅರೆಸ್ಟ್‌ ಮಾಡಬಹುದಾ?

ಒಂದು ವೇಳೆ ಪ್ರಜ್ವಲ್ ರೇವಣ್ಣ ಅವರು ಜರ್ಮನಿಯಲ್ಲಿಯೇ ಅಥವಾ ಇನ್ಯಾವುದೋ ದೇಶದಲ್ಲಿ ಅಡಗಿದ್ದಾರೆ ಎಂಬುದು ಗೊತ್ತಾದರೆ ಎಸ್‌ಐಟಿ ಹೋಗಿ ಅರೆಸ್ಟ್‌ ಮಾಡಬಹುದಾ ಎಂದು ಕೇಳಿದರೆ, ಅದು ಸಾಧ್ಯವಿಲ್ಲ ಎಂಬ ಉತ್ತರ ಸಿಗಲಿದೆ. ಹಾಗಾಗಿ ಅವರು ಯಾವ ದೇಶದಲ್ಲಿ ಅಡಗಿದ್ದಾರೆಂಬ ಮಾಹಿತಿ ಸಿಕ್ಕರೆ ಇಂಟರ್ ಪೋಲ್ ಮುಖಾಂತರ ಹಸ್ತಾಂತರ ಮಾಡಿಕೊಳ್ಳಬಹುದು. ಅದು ಕೂಡ ಆ ದೇಶ ಹಾಗೂ ನಮ್ಮ ದೇಶದ ನಡುವೆ ಹಸ್ತಾಂತರ ಒಪ್ಪಂದ (Extradition Treaty) ಇರಬೇಕು. ಆಗ ಅಲ್ಲಿನ ಸರ್ಕಾರಕ್ಕೆ ಮಾಹಿತಿ ನೀಡಿ ಹಸ್ತಾಂತರ ಮಾಡಿಕೊಳ್ಳಬಹುದು. ಅದೂ ಆಗದೇ ಹೋದರೆ, ಅವರು ಎಲ್ಲಿದ್ದಾರೆಂದು ತಿಳಿದುಕೊಂಡು ಸುಮ್ಮನೆ ಕೂರಬಹುದೇ ಹೊರತು ಬೇರೇನೂ ಮಾಡುವುದಕ್ಕೆ ಆಗುವುದಿಲ್ಲ. ಆಗ ಪ್ರಜ್ವಲ್ ತಾನಾಗಿಯೇ ಬರುವವರೆಗೂ ಕಾಯಲೇಬೇಕು.

Continue Reading

ರಾಜಕೀಯ

HD Devegowda: 92ನೇ ವರ್ಷದ ಹುಟ್ಟುಹಬ್ಬ ಆಚರಿಸಿಕೊಳ್ಳಲ್ಲ ಎಂದ ಎಚ್‌ಡಿ ದೇವೇಗೌಡ; ಮೊಮ್ಮಗನ ಕೇಸ್‌ನಿಂದ ಈ ತೀರ್ಮಾನ?

HD Devegowda: ಇದೇ ತಿಂಗಳ 18ಕ್ಕೆ ನಾನು 92ನೇ ವರ್ಷಕ್ಕೆ ಪದಾರ್ಪಣೆ ಮಾಡುತ್ತಿದ್ದು, ಕಾರಣಾಂತರಗಳಿಂದ ಹುಟ್ಟುಹಬ್ಬ ಆಚರಿಸಿಕೊಳ್ಳುತ್ತಿಲ್ಲ. ಹೀಗಾಗಿ ಇದ್ದಲ್ಲಿಂದಲೇ ಹಾರೈಸಿ ಎಂದು ಮನವಿ ಮಾಡಿಕೊಳ್ಳುತ್ತಿದ್ದೇನೆ. ಈಗ ನಡೆಯುತ್ತಿರುವ ವಿಧಾನ ಪರಿಷತ್ ಚುನಾವಣೆಗಳ ಮೈತ್ರಿ ಅಭ್ಯರ್ಥಿಗಳ ಗೆಲುವಿಗೆ ಶ್ರಮಿಸುವಂತೆ ಮನವಿ ಮಾಡಿದ್ದಾರೆ. ಅಲ್ಲದೆ, ನಿಮ್ಮೆಲ್ಲರ ವಿಶ್ವಾಸಕ್ಕೆ ಆಭಾರಿಯಾಗಿದ್ದೇನೆ ಎಂದು ಎಚ್.ಡಿ. ದೇವೇಗೌಡ ಪತ್ರದಲ್ಲಿ ಉಲ್ಲೇಖಿಸಿದ್ದಾರೆ.

VISTARANEWS.COM


on

HD DeveGowda Wont celebrate 92nd birthday
Koo

ಬೆಂಗಳೂರು: ಮಾಜಿ ಪ್ರಧಾನಿ, ಜೆಡಿಎಸ್‌ ವರಿಷ್ಠ ಎಚ್‌.ಡಿ. ದೇವೇಗೌಡ (HD Devegowda) ಅವರು ತಮ್ಮ 92ನೇ ವರ್ಷದ ಹುಟ್ಟುಹಬ್ಬವನ್ನು (HD Devegowda Birthday) ಆಚರಿಸಿಕೊಳ್ಳದಿರಲು ತೀರ್ಮಾನ ಮಾಡಿದ್ದಾರೆ. ಈ ಕುರಿತು ಮಾಧ್ಯಮ ಪ್ರಕಟಣೆಯನ್ನು ಹೊರಡಿಸಿರುವ ಎಚ್‌ಡಿಡಿ, ನೀವೆಲ್ಲರೂ ಇದ್ದಲ್ಲಿಯೇ ಹಾರೈಕೆ ತೋರಿ ಎಂದು ಹೇಳಿದ್ದಾರೆ.

ಇದೇ ತಿಂಗಳ 18ಕ್ಕೆ ನಾನು 92ನೇ ವರ್ಷಕ್ಕೆ ಪದಾರ್ಪಣೆ ಮಾಡುತ್ತಿದ್ದು, ಕಾರಣಾಂತರಗಳಿಂದ ಹುಟ್ಟುಹಬ್ಬ ಆಚರಿಸಿಕೊಳ್ಳುತ್ತಿಲ್ಲ. ಹೀಗಾಗಿ ಇದ್ದಲ್ಲಿಂದಲೇ ಹಾರೈಸಿ ಎಂದು ಮನವಿ ಮಾಡಿಕೊಳ್ಳುತ್ತಿದ್ದೇನೆ. ಈಗ ನಡೆಯುತ್ತಿರುವ ವಿಧಾನ ಪರಿಷತ್ ಚುನಾವಣೆಗಳ ಮೈತ್ರಿ ಅಭ್ಯರ್ಥಿಗಳ ಗೆಲುವಿಗೆ ಶ್ರಮಿಸುವಂತೆ ಮನವಿ ಮಾಡಿದ್ದಾರೆ. ಅಲ್ಲದೆ, ನಿಮ್ಮೆಲ್ಲರ ವಿಶ್ವಾಸಕ್ಕೆ ಆಭಾರಿಯಾಗಿದ್ದೇನೆ ಎಂದು ಎಚ್.ಡಿ. ದೇವೇಗೌಡ ಪತ್ರದಲ್ಲಿ ಉಲ್ಲೇಖಿಸಿದ್ದಾರೆ.

HD DeveGowda Wont celebrate 92nd birthday

ಏಕೆ ಈ ನಿರ್ಧಾರ?

ಈಗಾಗಲೇ ಮೊಮ್ಮಗ ಪ್ರಜ್ವಲ್‌ ರೇವಣ್ಣ ಅವರದ್ದು ಎನ್ನಲಾದ ಲೈಂಗಿಕ ದೌರ್ಜ್ಯನ್ಯ ಪ್ರಕರಣದಿಂದ ಕುಟುಂಬದ ಹೆಸರು ಮಣ್ಣುಪಾಲಾಗಿದೆ. ಸಾಕಷ್ಟು ಟೀಕೆಗಳು ಸಹ ಬರುತ್ತಿದೆ. ಇನ್ನು ಪುತ್ರ ಎಚ್.ಡಿ. ರೇವಣ್ಣ ಸಹ ಒಂದು ಬಾರಿ ಜೈಲಿಗೆ ಹೋಗಿ ಬಂದಿದ್ದಾರೆ. ಹೀಗಾಗಿ ಇಂಥ ನೋವಿನ ಸಂದರ್ಭದಲ್ಲಿ ತಾವು ಹುಟ್ಟುಹಬ್ಬವನ್ನು ಹೇಗೆ ಆಚರಿಸಿಕೊಳ್ಳುವುದು ಎಂಬ ಬೇಸರದಿಂದ ಈ ನಿರ್ಧಾರಕ್ಕೆ ಬಂದಿದ್ದಾರೆ ಎಂದು ಹೇಳಲಾಗುತ್ತಿದೆ.

Prajwal Revanna Case: ಸೆಕ್ಸ್‌ ಕೇಸಲ್ಲಿ ಎಕ್ಸ್‌ ಮಾನ್ಯತೆ ಕಳೆದುಕೊಂಡ ಪ್ರಜ್ವಲ್‌ ರೇವಣ್ಣ!

ಪ್ರಜ್ವಲ್‌ ರೇವಣ್ಣ (Prajwal Revanna Case) ಅವರದ್ದು ಎನ್ನಲಾದ ಅಶ್ಲೀಲ ವಿಡಿಯೊ (Absence video) ಪ್ರಕರಣಕ್ಕೆ ಸಂಬಂಧಿಸಿದಂತೆ ಸೋಷಿಯಲ್‌ ಮೀಡಿಯಾ ಎಕ್ಸ್‌ ಮಹತ್ವದ ತೀರ್ಮಾನವನ್ನು ತೆಗೆದುಕೊಂಡಿದೆ. ವೇರಿಫೈಡ್‌ ಅಕೌಂಟ್‌ ಸ್ಟೇಟಸ್‌ನಿಂದ ಪ್ರಜ್ವಲ್‌ ಹೊರಬಿದ್ದಿದ್ದಾರೆ. ಅವರಿಗಿದ್ದ ಬ್ಲ್ಯೂ ಟಿಕ್‌ ಮಾನ್ಯತೆ ಈಗ ಅಮಾನ್ಯಗೊಂಡಿದೆ.

ಸೋಷಿಯಲ್‌ ಮೀಡಿಯಾ ಎಕ್ಸ್‌ ಈ ಮೊದಲು ಟ್ವಿಟರ್‌ ಆಗಿತ್ತು. ಆಗಿನಿಂದಲೂ ಅಫೀಶಿಯಲ್‌ ಖಾತೆದಾರರಿಗೆ ಬ್ಲ್ಯೂ ಟಿಕ್‌ ಅನ್ನು ನೀಡಲಾಗುತ್ತಿತ್ತು. ಅದಕ್ಕೆ ಕೆಲವೊಂದಿಷ್ಟು ಪ್ರಕ್ರಿಯೆಗಳು ಇದ್ದವು. ಈ ಕಾರಣಕ್ಕೆ ಗಣ್ಯರು, ರಾಜಕಾರಣಿಗಳು, ಸಿನಿಮಾ ತಾರೆಯರು ಸೇರಿದಂತೆ ಹಲವರು ಈ ಬ್ಲ್ಯೂಟಿಕ್‌ ಅನ್ನು ಪಡೆದುಕೊಳ್ಳುತ್ತಿದ್ದರು. ಆದರೆ, ಎಲಾನ್‌ ಮಸ್ಕ್‌ ಟ್ವಿಟರ್‌ ಅನ್ನು ತನ್ನ ತೆಕ್ಕೆಗೆ ತೆಗೆದುಕೊಂಡ ನಂತರ ಹಲವು ಬದಲಾವಣೆಯನ್ನು ತಂದರು. ಬ್ಲ್ಯೂ ಟಿಕ್‌ ಬೇಕೆಂದರೆ ಹಣ ಪಾವತಿ ಮಾಡಬೇಕು ಎಂಬ ನಿಯಮವನ್ನು ಸಹ ತರಲಾಗಿದೆ. ಈಗ ಹಣ ಪಾವತಿ ಮಾಡಿಲ್ಲವೆಂದಾದರೆ ಅಥವಾ ಆ ಖಾತೆ ಬಗ್ಗೆ ದೂರುಗಳು ಬಂದರೆ ಬ್ಲ್ಯೂಟಿಕ್‌ ಅನ್ನು ವಾಪಸ್‌ ಪಡೆಯುವ ಅಧಿಕಾರವನ್ನು ಎಕ್ಸ್‌ ಹೊಂದಿದೆ. ಹೀಗಾಗಿ ಇಲ್ಲಿ ಪ್ರಜ್ವಲ್‌ ರೇವಣ್ಣ ಕೇಸ್‌ನಲ್ಲಿ ಏನಾಗಿದೆ ಎಂಬುದು ಸದ್ಯದ ಕುತೂಹಲವಾಗಿದೆ.

ಬ್ಲ್ಯೂ ಟಿಕ್‌ ಬೇಕೆಂದರೆ ದುಡ್ಡೆಷ್ಟು?

ಗ್ರಾಹಕರು ದುಡ್ಡು ಕೊಟ್ಟು ಈ ಬ್ಲ್ಯೂ ಟಿಕ್ ಮಾರ್ಕ್ ಖರೀದಿಸಬಹುದು. ಮೆಟಾ ವೆರಿಫೈಡ್ ಸಬ್ಸ್‌ಕ್ರಿಪ್ಷನ್ ಆಧಾರಿತ ಸೇವೆಯ ಅನ್ವಯ ಬಳಕೆದಾರರು ತಿಂಗಳಿಗೆ 699 ರೂ. ಪಾವತಿಸಿದರೆ ಬ್ಲೂ ಟಿಕ್ ದೊರೆಯಲಿದೆ. ಇದು ಫೇಸ್‌ಬುಕ್ ಮತ್ತು ಇನ್‌ಸ್ಟಾಗ್ರಾಮ್‌ ಎರಡಕ್ಕೂ ಅನ್ವಯವಾಗಲಿದೆ. ಆದರೆ, ಈಗ ಪ್ರಜ್ವಲ್‌ ಕೇಸ್‌ನಲ್ಲಿ ಯಾವ ಕಾರಣಕ್ಕೆ ಬ್ಲ್ಯೂಟಿಕ್‌ ಅನ್ನು ತೆಗೆಯಲಾಗಿದೆ ಎಂದು ಈವರೆಗೂ ಎಕ್ಸ್‌ ಸ್ಪಷ್ಟನೆ ನೀಡಿಲ್ಲ.

ವಿದೇಶಕ್ಕೆ ಹೋದ ಬಳಿಕ ಕೊನೆಯದಾಗಿ ಟ್ವೀಟ್‌ ಮಾಡಿದ್ದ ಪ್ರಜ್ವಲ್‌

ವಿದೇಶದಿಂದ ಬಾರದ ಪ್ರಜ್ವಲ್‌; ಜರ್ಮನಿಗೆ ಹೋಗುತ್ತಾ ಎಸ್‌ಐಟಿ ಟೀಂ? ಮುಂದಿನ ಆಯ್ಕೆ ಏನು?

ಪ್ರಜ್ವಲ್‌ ರೇವಣ್ಣ ದೇಶಬಿಟ್ಟು 19 ದಿನ ಕಳೆದಿದರೂ ಸುಳಿವಿಲ್ಲ. ಈಗಿನ ಪ್ರಕಾರ, ಸದ್ಯಕ್ಕೆ ಪ್ರಜ್ವಲ್ ವಾಪಸಾಗುವುದು ಅನುಮಾನ ಎನ್ನಲಾಗಿದೆ. ಹಾಗಾಗಿ ಎಸ್‌ಐಟಿ ಅಧಿಕಾರಿಗಳ ಮುಂದಿನ ನಡೆ ಏನು? ಬೇರೆ ದೇಶಕ್ಕೆ ಹೋಗಿ ಅವರನ್ನು ಬಂಧಿಸಿ ಕರೆತರಲು ಸಾಧ್ಯವಿದೆಯೇ? ಅದು ಸಾಧ್ಯವಿಲ್ಲವಾದರೆ ಬೇರೆ ಯಾವ ಮಾರ್ಗವಿದೆ? ಅಥವಾ ಪ್ರಜ್ವಲ್‌ ಬರುವವರೆಗೂ ಕಾಯುತ್ತಾ ಕೂರಬೇಕಾ ಎಂಬಿತ್ಯಾದಿ ಪ್ರಶ್ನೆಗಳು ಎದುರಾಗಿವೆ.

ಈಗಿನ ಮಾಹಿತಿ ಪ್ರಕಾರ ಹಾಗೂ ಗೃಹ ಸಚಿವ ಡಾ. ಜಿ. ಪರಮೇಶ್ವರ್‌ ಅವರ ಹೇಳಿಕೆಯನ್ನು ಗಮನದಲ್ಲಿಟ್ಟುಕೊಂಡು ನೋಡುವುದಾದರೆ ಸದ್ಯ ಎಸ್‌ಐಟಿ ತಂಡದವರು ಬೇರೆ ದೇಶಕ್ಕೆ ತೆರಳಿ ಪ್ರಜ್ವಲ್‌ ಅವರನ್ನು ಕರೆತರಲು ಸಾಧ್ಯವಿಲ್ಲ. ಇನ್ನು ಪ್ರಜ್ವಲ್‌ ಇಲ್ಲಿಂದ ಜರ್ಮನಿಗೆ ಫ್ಲೈಟ್‌ ಟಿಕೆಟ್‌ ಬುಕ್‌ ಮಾಡಿ ಹೋಗಿದ್ದಾರಾದರೂ ಅವರು ಜರ್ಮನಿಯಲ್ಲಿಯೇ ಇದ್ದಾರಾ? ಅಥವಾ ಅಲ್ಲಿಂದ ಬೇರೆ ದೇಶಕ್ಕೇನಾದರೂ ಹೋಗಿದ್ದಾರಾ ಎಂಬುದೂ ಖಾತ್ರಿಯಾಗಿಲ್ಲ. ಆದರೆ, ಅವರು ಜರ್ಮನಿಯಿಂದ ಬೆಂಗಳೂರಿಗೆ ಬರುವಂತೆ ಫ್ಲೈಟ್‌ ಟಿಕೆಟ್‌ ಅನ್ನು ಮಾತ್ರ ಬುಕ್‌ ಮಾಡುತ್ತಾ ಕುಳಿತಿದ್ದಾರೆ. ಕೊನೇ ಕ್ಷಣದಲ್ಲಿ ಫ್ಲೈಟ್‌ ಹತ್ತದೆ ಎಸ್‌ಐಟಿಗೆ ಚಳ್ಳೆಹಣ್ಣು ತಿನ್ನಿಸುತ್ತಿದ್ದಾರೆ. ಅದು ಬಿಟ್ಟರೆ ಇತ್ತ ಸುಳಿಯುವ ಯಾವುದೇ ಲಕ್ಷಣಗಳು ಸದ್ಯಕ್ಕಂತೂ ಗೋಚರಿಸುತ್ತಿಲ್ಲ.

ಹೀಗಾಗಿ ಮೊದಲು ಪ್ರಜ್ವಲ್ ಯಾವ ದೇಶದಲ್ಲಿದ್ದಾರೆ ಎಂಬ ಖಚಿತ ಮಾಹಿತಿಯನ್ನು ಕಲೆ ಹಾಕಬೇಕು. ಇಲ್ಲದೆ ಹೋದರೆ ಈಗಾಗಲೇ ಜಾರಿ ಮಾಡಲಾಗಿರುವ ಬ್ಲೂ ಕಾರ್ನರ್ ನೋಟಿಸ್‌ನಿಂದಾಗಿ ಯಾವ ದೇಶದಿಂದಾದರೂ ಮಾಹಿತಿ ಬರುತ್ತದೆಯೇ ಎಂಬುದನ್ನು ಕಾದು ನೋಡಬೇಕು. ಹೀಗಾಗಿ ಇಂಟರ್ ಪೋಲ್ ಅಧಿಕಾರಿಗಳಿಂದ ಮಾಹಿತಿ ಬರುವವರೆಗೂ ಕಾಯಲೇಬೇಕು.

ಇದನ್ನೂ ಓದಿ: Prajwal Revanna Case: ಜರ್ಮನಿಯಿಂದ ವಿಮಾನ ಹತ್ತಲೇ ಇಲ್ಲ ಪ್ರಜ್ವಲ್‌; ಎಸ್‌ಐಟಿಗೆ ಚಳ್ಳೆಹಣ್ಣು ತಿನ್ನಿಸಿದ ಸಂಸದ!

ಪ್ರಜ್ವಲ್‌ ಇರುವ ದೇಶ ಗೊತ್ತಾದರೆ ಎಸ್‌ಐಟಿ ಅರೆಸ್ಟ್‌ ಮಾಡಬಹುದಾ?

ಒಂದು ವೇಳೆ ಪ್ರಜ್ವಲ್ ರೇವಣ್ಣ ಅವರು ಜರ್ಮನಿಯಲ್ಲಿಯೇ ಅಥವಾ ಇನ್ಯಾವುದೋ ದೇಶದಲ್ಲಿ ಅಡಗಿದ್ದಾರೆ ಎಂಬುದು ಗೊತ್ತಾದರೆ ಎಸ್‌ಐಟಿ ಹೋಗಿ ಅರೆಸ್ಟ್‌ ಮಾಡಬಹುದಾ ಎಂದು ಕೇಳಿದರೆ, ಅದು ಸಾಧ್ಯವಿಲ್ಲ ಎಂಬ ಉತ್ತರ ಸಿಗಲಿದೆ. ಹಾಗಾಗಿ ಅವರು ಯಾವ ದೇಶದಲ್ಲಿ ಅಡಗಿದ್ದಾರೆಂಬ ಮಾಹಿತಿ ಸಿಕ್ಕರೆ ಇಂಟರ್ ಪೋಲ್ ಮುಖಾಂತರ ಹಸ್ತಾಂತರ ಮಾಡಿಕೊಳ್ಳಬಹುದು. ಅದು ಕೂಡ ಆ ದೇಶ ಹಾಗೂ ನಮ್ಮ ದೇಶದ ನಡುವೆ ಹಸ್ತಾಂತರ ಒಪ್ಪಂದ (Extradition Treaty) ಇರಬೇಕು. ಆಗ ಅಲ್ಲಿನ ಸರ್ಕಾರಕ್ಕೆ ಮಾಹಿತಿ ನೀಡಿ ಹಸ್ತಾಂತರ ಮಾಡಿಕೊಳ್ಳಬಹುದು. ಅದೂ ಆಗದೇ ಹೋದರೆ, ಅವರು ಎಲ್ಲಿದ್ದಾರೆಂದು ತಿಳಿದುಕೊಂಡು ಸುಮ್ಮನೆ ಕೂರಬಹುದೇ ಹೊರತು ಬೇರೇನೂ ಮಾಡುವುದಕ್ಕೆ ಆಗುವುದಿಲ್ಲ. ಆಗ ಪ್ರಜ್ವಲ್ ತಾನಾಗಿಯೇ ಬರುವವರೆಗೂ ಕಾಯಲೇಬೇಕು.

Continue Reading

Lok Sabha Election 2024

Lok Sabha Election 2024: ನಾಲ್ಕು ಹಂತಗಳ ಮತದಾನ ಅಂತ್ಯ; ಕಾಂಗ್ರೆಸ್ ಆಂತರಿಕ ವರದಿಯಲ್ಲೇನಿದೆ?

Lok Sabha Election 2024: ಲೋಕಸಭಾ ಚುನಾವಣೆಯ ಮೊದಲ ನಾಲ್ಕು ಹಂತದ ಮತದಾನ ಈಗಾಗಲೇ ಮುಗಿದಿದೆ. ಇದೀಗ ಕಾಂಗ್ರೆಸ್ ಅಧ್ಯಕ್ಷ ಮಲ್ಲಿಕಾರ್ಜುನ ಖರ್ಗೆ ಇಂಡಿಯಾ’ ಮೈತ್ರಿಕೂಟ ದ ಆಂತರಿಕ ಸಮೀಕ್ಷೆಯ ಫಲಿತಾಂಶಗಳನ್ನು ಬಹಿರಂಗಪಡಿಸಿದ್ದಾರೆ. ʼʼಇಂಡಿಯಾʼ ಬಣಕ್ಕೆ ನಿರೀಕ್ಷೆಗಿಂತ ಹೆಚ್ಚಿನ ಸೀಟು ದೊರೆಯಲಿದೆ. ನಾಲ್ಕು ಹಂತಗಳ ಮತದಾನದಲ್ಲಿಯೂ ʼಇಂಡಿಯಾʼ ಒಕ್ಕೂಟ ಮುನ್ನಡೆ ಸಾಧಿಸಿದೆʼʼ ಎಂದು ತಿಳಿಸಿದ್ದಾರೆ.

VISTARANEWS.COM


on

Lok Sabha Election 2024
Koo

ನವದೆಹಲಿ: ಲೋಕಸಭಾ ಚುನಾವಣೆ (Lok Sabha Election 2024)ಯ ಮೊದಲ ನಾಲ್ಕು ಹಂತದ ಮತದಾನ ಈಗಾಗಲೇ ಮುಗಿದಿದೆ. ಇದೀಗ ಕಾಂಗ್ರೆಸ್ ಅಧ್ಯಕ್ಷ ಮಲ್ಲಿಕಾರ್ಜುನ ಖರ್ಗೆ (Mallikarjun Kharge) ‘ಇಂಡಿಯಾ’ ಮೈತ್ರಿಕೂಟ (I.N.D.I.A bloc)ದ ಆಂತರಿಕ ಸಮೀಕ್ಷೆಯ ಫಲಿತಾಂಶಗಳನ್ನು ಬಹಿರಂಗಪಡಿಸಿದರು. ಮೈತ್ರಿಕೂಟದ ಪಾಲುದಾರ ಸಮಾಜವಾದಿ ಪಕ್ಷದ ಮುಖ್ಯಸ್ಥ ಅಖಿಲೇಶ್ ಯಾದವ್ ಅವರೊಂದಿಗೆ ಜಂಟಿ ಪತ್ರಿಕಾಗೋಷ್ಠಿಯನ್ನುದ್ದೇಶಿಸಿ ಮಾತನಾಡಿದ ಖರ್ಗೆ, ʼʼಇಂಡಿಯಾʼ ಬಣಕ್ಕೆ ನಿರೀಕ್ಷೆಗಿಂತ ಹೆಚ್ಚಿನ ಸೀಟು ದೊರೆಯಲಿದೆ. ನಾಲ್ಕು ಹಂತಗಳ ಮತದಾನದಲ್ಲಿಯೂ ʼಇಂಡಿಯಾʼ ಒಕ್ಕೂಟ ಮುನ್ನಡೆ ಸಾಧಿಸಿದೆʼʼ ಎಂದು ತಿಳಿಸಿದರು.

ಒಬಿಸಿ, ಎಸ್‌ಸಿ / ಎಸ್‌ಟಿ ಸಮುದಾಯಗಳ ಮೀಸಲಾತಿ ಬಗ್ಗೆ ಕಾಂಗ್ರೆಸ್ ನಿಲುವಿನ ಬಗ್ಗೆ ಮಾತನಾಡಿದ ಖರ್ಗೆ, ʼʼಕೆಲವರು ಮಾತ್ರ ಮೀಸಲಾತಿ ಪಡೆದುಕೊಳ್ಳಬಹುದು. ಆದರೆ ರಾಷ್ಟ್ರದ ಭವಿಷ್ಯಕ್ಕಾಗಿ ಕೆಲಸ ಮಾಡುವುದು ದೇಶದ ಪ್ರತಿಯೊಬ್ಬರ ಜವಾಬ್ದಾರಿʼʼ ಎಂದು ಹೇಳಿದರು. ʼʼಮೀಸಲಾತಿ ಭಾರತದ ಪ್ರಜಾಪ್ರಭುತ್ವವನ್ನು ಭದ್ರಪಡಿಸುವ ಒಂದು ಭಾಗ. ಕಾಂಗ್ರೆಸ್ ಯಾವಾಗಲೂ ಮೀಸಲಾತಿಯ ಬಗ್ಗೆ ಮಾತನಾಡುತ್ತದೆ. ಆದರೆ ಅದರಿಂದ ನನಗೆ ಪ್ರಯೋಜನವೇನು? ಎಂದು ಅನೇಕರು ಹೇಳುತ್ತಾರೆ. ಮೀಸಲಾತಿ ಪ್ರಯೋಜನಗಳನ್ನು ಕೆಲವರು ಪಡೆಯಬಹುದು, ಆದರೆ ಸಂವಿಧಾನವನ್ನು ಉಳಿಸಲು ನಾವು ಒಟ್ಟಾಗಿ ಕೆಲಸ ಮಾಡಬೇಕಾಗಿದೆ. ಇದರಲ್ಲಿ ವಿಫಲವಾದರೆ ನಾವು ಗುಲಾಮರಾಗಬೇಕಾಗುತ್ತದೆʼʼ ಎಂದು ವಿವರಿಸಿದರು.

“ಈ ಹಿಂದೆ ಆರ್‌ಎಸ್‌ಎಸ್‌ ನಾಯಕ ಮೋಹನ್ ಭಾಗವತ್ ಅವರು ಬಿಜೆಪಿ ಅಧಿಕಾರಕ್ಕೆ ಬಂದರೆ ಸಂವಿಧಾನದಲ್ಲಿ ಬದಲಾವಣೆಗಳನ್ನು ತರುವುದಾಗಿ ಘೋಷಿಸಿದ್ದರು. ಜತೆಗೆ ಅನೇಕ ಬಿಜೆಪಿ ನಾಯಕರು ಇದೇ ರೀತಿಯ ಮಾತುಗಳನ್ನು ಆಡಿದ್ದಾರೆ. ಈ ಎಲ್ಲದರ ಬಗ್ಗೆ ಪ್ರಧಾನಿ ಮೌನವಾಗಿದ್ದಾರೆʼʼ ಎಂದ ಖರ್ಗೆ, ʼʼಸಂವಿಧಾನ ಬದಲಾವಣೆ ನಿಜವಾಗಿಯೂ ನಿಮ್ಮ ಉದ್ದೇಶವಲ್ಲದಿದ್ದರೆ, ಸಂವಿಧಾನವನ್ನು ಬದಲಾಯಿಸುವ ಬಗ್ಗೆ ಮಾತನಾಡುವವರ ವಿರುದ್ಧ ನೀವು ಏಕೆ ಕ್ರಮ ಕೈಗೊಳ್ಳಬಾರದು?” ಎಂದು ಮೋದಿ ಅವರನ್ನು ಪ್ರಶ್ನಿಸಿದರು. ʼʼನೀವು (ಮೋದಿ) ನಿಮ್ಮ 56 ಇಂಚಿನ ಎದೆಯ ಬಗ್ಗೆ ಪದೇ ಪದೆ ಮಾತನಾಡುತ್ತೀರಿ. ಆದರೆ ಸಂವಿಧಾನದ ವಿರುದ್ಧವಾಗಿ ಮಾತನಾಡುವವರ ವಿರುದ್ಧ ಕ್ರಮ ಕೈಗೊಳ್ಳುವುದಿಲ್ಲ ಯಾಕೆ?ʼʼ ಎಂದು ಕೇಳಿದರು.

ಆಂತರಿಕ ಸಮೀಕ್ಷೆಯಲ್ಲಿ ಏನಿದೆ?

ʼʼನಾಲ್ಕು ಹಂತದ ಮತದಾನ ಮುಗಿದಿದೆ. ಜತೆಗೆ ಪಕ್ಷದ ಆಂತರಿಕ ಸಮೀಕ್ಷೆಯ ವರದಿ ನಮ್ಮ ಕೈ ಸೇರಿದೆ. ಇದು ʼಇಂಡಿಯಾʼ ಒಕ್ಕೂಟ ಉತ್ತಮ ಸಾಧನೆ ಮಾಡಲಿದೆ ಎಂದು ಹೇಳಿದೆ. ಜೂನ್‌ 4ರಂದು ʼಇಂಡಿಯಾʼ ಬಣ ಅಧಿಕಾರಕ್ಕೆ ಬರಲಿದೆ ಎನ್ನುವ ವಿಶ್ವಾಸವಿದೆʼʼ ಎಂದು ಖರ್ಗೆ ತಿಳಿಸಿದರು.

ಪ್ರಸ್ತುತ ನಡೆಯುತ್ತಿರುವ ಚುನಾವಣೆಯು ಸಿದ್ಧಾಂತಗಳ ನಡುವಿನ ಕದನ ಎಂದು ಬಣ್ಣಿಸಿರುವ ಕಾಂಗ್ರೆಸ್‌ ಅಧ್ಯಕ್ಷರು, ʼʼಒಂದು ಬಣ ಬಡವರಿಗಾಗಿ ಹೋರಾಟ ನಡೆಸುತ್ತಿದ್ದರೆ ಇನ್ನೊಂದು ಬಣ ಧರ್ಮದ ಆಧಾರದಲ್ಲಿ ತಮ್ಮ ಶ್ರೀಮಂತ ಗೆಳೆಯರಿಗಾಗಿ ಕಣ್ಣಕ್ಕಿಳಿದಿದೆ. ಶ್ರೀಮಂತ ಮತ್ತು ಬಡವರ ನಡುವಿನ ಅಂತರ ಕಡಿಮೆ ಮಾಡಲು ನಾವು ಹೋರಾಟ ನಡೆಸುತ್ತಿದ್ದೇವೆʼʼ ಎಂದು ಹೇಳಿದರು. ಜತೆಗೆ ʼʼಆಡಳಿತ ಪಕ್ಷ (ಬಿಜೆಪಿ) ಅಭ್ಯರ್ಥಿಗಳನ್ನು ನಾಮಪತ್ರ ಹಿಂತೆಗೆದುಕೊಳ್ಳುವಂತೆ ಬೆದರಿಸುತ್ತಿದೆʼʼ ಎಂದು ಆರೋಪಿಸಿದರು.

ʼʼಚುನಾವಣೆಯಲ್ಲಿ ಸೋಲುವ ಭಯದಿಂದ ಬಿಜೆಪಿ ಮತದಾರರನ್ನು ಬೆದರಿಸಲು ಪ್ರಯತ್ನಿಸುತ್ತಿದೆʼʼ ಎಂದು ಖರ್ಗೆ ದೂರಿದರು. ʼʼತಪಾಸಣೆ ಹೆಸರಿನಲ್ಲಿ ಹೈದರಾಬಾದ್‌ನಲ್ಲಿ ಬಿಜೆಪಿ ಅಭ್ಯರ್ಥಿ ಮುಸ್ಲಿಂ ಮಹಿಳೆಯರ ಬುರ್ಕಾ ತೆಗೆದುದನ್ನು ನಾವೆಲ್ಲ ನೋಡಿದ್ದೇವೆʼʼ ಎಂದು ಮಾಧವಿ ಲತಾ ಅವರ ನಡೆಯನ್ನು ಖರ್ಗೆ ಪ್ರಸ್ತಾವಿಸಿದರು.

ಇದನ್ನೂ ಓದಿ: Amit Shah: ಪ್ರಚಾರದ ವೇಳೆ ಕೇಜ್ರಿವಾಲ್‌ ನೀಡಿದ ಹೇಳಿಕೆಯಿಂದ ನ್ಯಾಯಾಂಗ ನಿಂದನೆ; ಅಮಿತ್‌ ಶಾ ವಾಗ್ದಾಳಿ

ಪ್ರಧಾನಿ ಮಟನ್‌, ಮಂಗಳಸೂತ್ರದ ಬಗ್ಗೆ ಮಾತ್ರ ಮಾತನಾಡುತ್ತಾರೆ

ʼʼಪ್ರಧಾನಿ ಮೋದಿ ಅವರು ತಮ್ಮ ಚುನಾವಣಾ ಪ್ರಚಾರದಲ್ಲಿ ಮಟನ್‌, ಚಿಕನ್‌ ಮತ್ತು ಮಂಗಳಸೂತ್ರದ ಬಗ್ಗೆ ಮಾತ್ರ ಮಾತನಾಡುತ್ತಾರೆ. ಮಣಿಪುರದಲ್ಲಿನ ಸಂಘರ್ಷದ ಬಗ್ಗೆ ತುಟಿ ಬಿಚ್ಚುತ್ತಿಲ್ಲʼʼ ಎಂದು ಖರ್ಗೆ ಟೀಕಿಸಿದರು. ಕಾಂಗ್ರೆಸ್ ಪ್ರಣಾಳಿಕೆಯ ಬಗ್ಗೆ ಪ್ರಧಾನಿ ಮೋದಿ ಸುಳ್ಳು ಹೇಳಿದ್ದಾರೆ ಎಂದು ವಾಗ್ದಾಳಿ ನಡೆಸಿದ ಖರ್ಗೆ “ಕಾಂಗ್ರೆಸ್ ಪ್ರಣಾಳಿಕೆಯ ಬಗ್ಗೆ ನಾವು ಎಕ್ಸ್-ರೇ ಮಾಡುತ್ತಿದ್ದೇವೆ ಎಂದು ಅವರು ಹೇಳುತ್ತಾರೆ. ನಿಮ್ಮ ಮನೆಯಲ್ಲಿ ಎರಡು ಎಮ್ಮೆಗಳಿದ್ದರೆ, ಒಂದನ್ನು ಮುಸ್ಲಿಮರಿಗೆ ನೀಡಬೇಕಾಗುತ್ತದೆ ಎಂದು ಅವರು ಎಲ್ಲೋ ಹೇಳಿದರು. ಪ್ರಧಾನಿ ಇಷ್ಟು ಸುಳ್ಳು ಹೇಳಿದರೆ ನಾವೇನು ಮಾಡಲು ಸಾಧ್ಯ?ʼʼ ಎಂದು ತಿಳಿಸಿದರು.

Continue Reading
Advertisement
Namrata Gowda Holiday Look in Red Ruffle Layered Maxi Dress
ಫ್ಯಾಷನ್1 min ago

Namratha Gowda: ರೆಡ್‌ ರಫಲ್‌ ಲೇಯರ್‌ ಮ್ಯಾಕ್ಸಿ ಡ್ರೆಸ್‌ನಲ್ಲಿ ನಟಿ ನಮ್ರತಾ ಗೌಡ ಹಾಲಿಡೇ ಲುಕ್‌!

Viral News
ವೈರಲ್ ನ್ಯೂಸ್2 mins ago

Viral News: ಶ್ವಾನದ ಜತೆ ವಾಕಿಂಗ್‌ ಹೋಗುತ್ತಿದ್ದ ವ್ಯಕ್ತಿಯ ವೇಳೆ ಹಲ್ಲೆ; ಶಾಕಿಂಗ್‌ ವಿಡಿಯೊ ಇಲ್ಲಿದೆ

Karnataka Weather Forecast
ಮಳೆ15 mins ago

Karnataka Weather : ಭಾರಿ ಮಳೆಗೆ ಕೊಟ್ಟೂರು ಬಸ್ ಸ್ಟ್ಯಾಂಡ್‌ ಜಲಾವೃತ; ‌ ತಾಯಿ-ಮಗ ಗ್ರೇಟ್‌ ಎಸ್ಕೇಪ್‌

BMW X3 xDrive20d
ಪ್ರಮುಖ ಸುದ್ದಿ29 mins ago

BMW X3 : ಬಿಎಂಡಬ್ಲ್ಯು ಎಕ್ಸ್3 ಎಕ್ಸ್ ಡ್ರೈವ್ 20ಡಿ ಎಂ ಸ್ಪೋರ್ಟ್ ಶಾಡೋ ಎಡಿಷನ್ ಬಿಡುಗಡೆ

Most costly medicine
ಆರೋಗ್ಯ31 mins ago

Most Costly Medicine: ಒಂದೇ ಒಂದು ಡೋಸ್ ಗೆ 17 ಕೋಟಿ ರೂ! ಈ ಔಷಧ ಏಕೆ ಇಷ್ಟೊಂದು ದುಬಾರಿ?

Cannes 2024 Fashion celebrities trend
ಫ್ಯಾಷನ್37 mins ago

Cannes 2024 Fashion: ಕಾನ್‌ ಫಿಲ್ಮ್‌ ಫೆಸ್ಟಿವಲ್‌ನಲ್ಲಿ ಸೆಲೆಬ್ರೆಟಿಗಳ ಫ್ಯಾಷನ್‌ ಟ್ರೆಂಡ್‌ ಹೇಗಿದೆ ನೋಡಿ!

PM Narendra Modi
ದೇಶ41 mins ago

PM Narendra Modi:”ಅಬ್ಬಾ.. ಎಂಥಾ ಮೇಕಪ್!”- ಮತ್ತೆ ಗಮನ ಸೆಳೆದ ಮೋದಿ; ವಿಡಿಯೋ ವೈರಲ್‌

viral video
ಕ್ರಿಕೆಟ್45 mins ago

Viral Video: ವಿಚ್ಛೇದನ ಕೇಸ್​ ಹೆಚ್ಚಳಕ್ಕೆ ಇದುವೇ ಪ್ರಮುಖ ಕಾರಣ ಎಂದ ಪಾಕ್​ ಕ್ರಿಕೆಟ್​ ತಂಡದ ಮಾಜಿ ನಾಯಕ

Sita Temple
ದೇಶ47 mins ago

Sita Temple: ಬಿಜೆಪಿಯಿಂದ ಶೀಘ್ರವೇ ಸೀತೆಗಾಗಿ ಮಂದಿರ ನಿರ್ಮಾಣ; ಅಮಿತ್‌ ಶಾ ಮಹತ್ವದ ಘೋಷಣೆ

Prajwal Revanna Case pen drive and hard disk were found during the raids in Hassan and Bengaluru
ಕ್ರೈಂ56 mins ago

Prajwal Revanna Case: ಹಾಸನ, ಬೆಂಗಳೂರು ದಾಳಿ ವೇಳೆ ಸಿಕ್ಕ ಪೆನ್‌ಡ್ರೈವ್‌, ಹಾರ್ಡ್‌ ಡಿಸ್ಕ್‌ ಎಷ್ಟು? ಎಫ್‌ಎಸ್‌ಎಲ್‌ಗೆ ರವಾನೆ

Sharmitha Gowda in bikini
ಕಿರುತೆರೆ7 months ago

Geetha Serial Kannada: ನಿದ್ದೆ ಕದ್ದ ಚೋರಿ! ನಟಿ `ಭಾನುಮತಿ’ ಹಾಟ್‌ ಪೋಟೊಗಳಿಗೆ ಫ್ಯಾನ್ಸ್ ಫುಲ್ ಫಿದಾ

Kannada Serials
ಕಿರುತೆರೆ7 months ago

Kannada Serials TRP: 2ನೇ ಸ್ಥಾನದಲ್ಲಿ 2 ಧಾರಾವಾಹಿಗಳು; ಟಿಆರ್‌ಪಿ ರೇಸ್‌ನಲ್ಲಿಲ್ಲ ಭಾಗ್ಯಲಕ್ಷ್ಮೀ!

Bigg Boss- Saregamapa 20 average TRP
ಕಿರುತೆರೆ7 months ago

Kannada Serials TRP: ಏಳನೇ ಸ್ಥಾನಕ್ಕೆ ʻಅಮೃತಧಾರೆʼ ಕುಸಿತ; ಬಿಗ್‌ ಬಾಸ್‌-ಸರಿಗಮಪ ಟಿಆರ್‌ಪಿ ಎಷ್ಟು?

galipata neetu
ಕಿರುತೆರೆ6 months ago

Kanyadana Serial: ಕಿರುತೆರೆಗೆ ಮತ್ತೆ ಎಂಟ್ರಿ ಕೊಟ್ಟ ʻಗಾಳಿಪಟʼ ಖ್ಯಾತಿಯ ʻನೀತುʼ!

Kannada Serials
ಕಿರುತೆರೆ8 months ago

Kannada Serials TRP: ನಾಲ್ಕನೇ ಸ್ಥಾನಕ್ಕೆ ಕುಸಿತ ಕಂಡ ʻಸೀತಾ ರಾಮʼ; ಟಿಆರ್‌ಪಿ ರೇಸ್‌ಗೆ ʻಭಾಗ್ಯಲಕ್ಷ್ಮಿʼ ಬ್ಯಾಕ್‌!

Kannada Serials
ಕಿರುತೆರೆ7 months ago

Kannada Serials TRP: ಟಿಆರ್‌ಪಿಯಲ್ಲಿ ʻಭಾಗ್ಯಲಕ್ಷ್ಮೀʼ ಹವಾ; ʻಪುಟ್ಟಕ್ಕನ ಮಕ್ಕಳುʼ ಧಾರಾವಾಹಿಗೆ ಸಂಕಷ್ಟ!

Bigg Boss' dominates TRP; Sita Rama fell to the sixth position
ಕಿರುತೆರೆ7 months ago

Kannada Serials TRP: ಟಿಆರ್‌ಪಿಯಲ್ಲಿ ʻಬಿಗ್ ಬಾಸ್ʼದೇ ಮೇಲುಗೈ; 6ನೇ ಸ್ಥಾನಕ್ಕೆ ಕುಸಿದ ʻಸೀತಾ ರಾಮʼ

geetha serial Dhanush gowda engagement
ಕಿರುತೆರೆ5 months ago

Dhanush Gowda: ಗೀತಾ ಧಾರಾವಾಹಿ ನಟನ ನಿಶ್ಚಿತಾರ್ಥ; ಭವ್ಯಾಳ ಕಮೆಂಟ್‌ ಬಾಕ್ಸ್‌ ಆಫ್‌!

varun
ಕಿರುತೆರೆ6 months ago

Brindavana Serial: ʼಬೃಂದಾವನʼ ಧಾರಾವಾಹಿಯಲ್ಲಿ ದೊಡ್ಡ ಟ್ವಿಸ್ಟ್‌; ಪ್ರಮುಖ ಪಾತ್ರಧಾರಿಯೇ ಬದಲು

Kannada Serials
ಕಿರುತೆರೆ8 months ago

Kannada Serials TRP: ಟಿಆರ್‌ಪಿಯಲ್ಲಿ ಏರಿಕೆ ಕಂಡ ʻಅಮೃತಧಾರೆʼ; ʻಗಟ್ಟಿಮೇಳʼಕ್ಕೆ ನಾಲ್ಕನೇ ಸ್ಥಾನ!

Karnataka Weather Forecast
ಮಳೆ15 mins ago

Karnataka Weather : ಭಾರಿ ಮಳೆಗೆ ಕೊಟ್ಟೂರು ಬಸ್ ಸ್ಟ್ಯಾಂಡ್‌ ಜಲಾವೃತ; ‌ ತಾಯಿ-ಮಗ ಗ್ರೇಟ್‌ ಎಸ್ಕೇಪ್‌

Suspicious Case
ಬೆಂಗಳೂರು6 hours ago

Suspicious Case : ಬಾತ್‌ ರೂಂನಲ್ಲಿತ್ತು ಕಾಲೇಜು ಹುಡುಗಿ ಡೆಡ್‌ ಬಾಡಿ; ಕುತ್ತಿಗೆ ಕೊಯ್ದು ಸಾಯಿಸಿದವರು ಯಾರು?

Prajwal Revanna Case
ಕರ್ನಾಟಕ1 day ago

Prajwal Revanna Case: ಪ್ರಜ್ವಲ್‌ ರೇವಣ್ಣ ಇಂದೇ ಜರ್ಮನಿಯಿಂದ ಭಾರತಕ್ಕೆ? ಎಸ್‌ಐಟಿ ಅಲರ್ಟ್‌

Dina Bhavishya
ಭವಿಷ್ಯ1 day ago

Dina Bhavishya : ಭೂ ವ್ಯವಹಾರಕ್ಕೆ ಇದು ಸೂಕ್ತ ಸಮಯ; ವ್ಯಾಪಾರದಲ್ಲಿ ಡಬಲ್‌ ಲಾಭ

HD Revanna Released first reaction after release will be acquitted of all charges
ರಾಜಕೀಯ2 days ago

HD Revanna Released: ರಿಲೀಸ್‌ ಬಳಿಕ ರೇವಣ್ಣ ಫಸ್ಟ್‌ ರಿಯಾಕ್ಷನ್;‌ ನ್ಯಾಯಾಂಗದ ಮೇಲೆ ನಂಬಿಕೆ ಇದೆ; ಆರೋಪ ಮುಕ್ತನಾಗುವೆ

CM Siddaramaiah says Our government is stable for 5 years BJP will disintegrate
Lok Sabha Election 20242 days ago

CM Siddaramaiah: ನಮ್ಮ ಸರ್ಕಾರ 5 ವರ್ಷ ಸುಭದ್ರ; ಚುನಾವಣೆ ಬಳಿಕ ಬಿಜೆಪಿ ಛಿದ್ರ ಎಂದ ಸಿಎಂ ಸಿದ್ದರಾಮಯ್ಯ!

I dont want to go to other states for Lok Sabha Election 2024 campaign for Congress says CM Siddaramaiah
Lok Sabha Election 20242 days ago

CM Siddaramaiah: ಕಾಂಗ್ರೆಸ್‌ ಪರ ಬೇರೆ ರಾಜ್ಯಗಳಿಗೆ ಪ್ರಚಾರಕ್ಕೆ ಹೋಗಲು ನನಗೆ ಇಷ್ಟವಿಲ್ಲ: ಸಿಎಂ ಸಿದ್ದರಾಮಯ್ಯ!

HD Revanna Bail I am not happy that Revanna has been released says HD Kumaraswamy
ರಾಜಕೀಯ2 days ago

HD Revanna Bail: ರೇವಣ್ಣ ಬಿಡುಗಡೆಯಾಗಿದ್ದಕ್ಕೆ ನಾನಂತೂ ಖುಷಿ ಪಡಲ್ಲ ಎಂದ ಎಚ್‌ಡಿಕೆ!

karnataka Rain Effected
ಬೆಂಗಳೂರು2 days ago

Karnataka Rain: ಮಿಡ್‌ನೈಟ್‌ ಮಳೆ ಅವಾಂತರ; ಮರಗಳು, ವಿದ್ಯುತ್‌ ಕಂಬಗಳು ಧರೆಗೆ, ಕುಸಿದು ಬಿದ್ದ ಮನೆ

Dina Bhavishya
ಭವಿಷ್ಯ2 days ago

Dina Bhavishya : ಉದ್ಯೋಗದ ಸ್ಥಳದಲ್ಲಿ ನಿಮ್ಮ ವಿರುದ್ಧ ಪಿತೂರಿ ಮಾಡ್ಬಹುದು ಎಚ್ಚರ!

ಟ್ರೆಂಡಿಂಗ್‌