Lok Sabha Election 2024: ಕಾಂತೇಶ್‌ಗೆ ಹಾವೇರಿ ಟಿಕೆಟ್‌; ಈಶ್ವರಪ್ಪನವರೇ ದೆಹಲಿಗೆ ಬನ್ನಿ ಎಂದು ಬಿಎಸ್‌ವೈ ಆಹ್ವಾನ - Vistara News

Lok Sabha Election 2024

Lok Sabha Election 2024: ಕಾಂತೇಶ್‌ಗೆ ಹಾವೇರಿ ಟಿಕೆಟ್‌; ಈಶ್ವರಪ್ಪನವರೇ ದೆಹಲಿಗೆ ಬನ್ನಿ ಎಂದು ಬಿಎಸ್‌ವೈ ಆಹ್ವಾನ

Lok Sabha Election 2024: ಈ ಬಗ್ಗೆ ಶಿವಮೊಗ್ಗದಲ್ಲಿ ಮಾಜಿ ಸಿಎಂ ಬಿ.ಎಸ್.‌ ಯಡಿಯೂರಪ್ಪ ಅವರನ್ನು ಕಾಂತೇಶ್‌ ಬೆಂಬಲಿಗರು ಭೇಟಿ ಮಾಡಿ ಮನವಿ ಮಾಡಿದ್ದಾರೆ. ಅವರಿಗೆ ಹಾವೇರಿ ಲೋಕಸಭಾ ಟಿಕೆಟ್‌ ನೀಡುವಂತೆ ಒತ್ತಾಯ ಮಾಡಿದ್ದಾರೆ. ಇದಕ್ಕೆ ಬಿಎಸ್‌ವೈ ಸಹ ಸಕಾರಾತ್ಮಕವಾಗಿ ಸ್ಪಂದಿಸಿದ್ದಾರೆ. ಆದರೆ, ತಮ್ಮ ಜತೆಗೆ ನವ ದೆಹಲಿಗೆ ಈಶ್ವರಪ್ಪ ಅವರು ಬರಬೇಕು ಎಂದು ಹೇಳಿದ್ದಾರೆ.

VISTARANEWS.COM


on

Lok Sabha Election 2024 Kanthesh gets ticket BS Yediyurappa invites KS Eshwarappa to come to Delhi
ಮಹತ್ವದ, ಕುತೂಹಲಕರ ಸುದ್ದಿಗಾಗಿ ಫಾಲೊ ಮಾಡಿ
Koo

ಶಿವಮೊಗ್ಗ: ಲೋಕಸಭಾ ಚುನಾವಣೆ (Lok Sabha Election 2024) ಹಿನ್ನೆಲೆಯಲ್ಲಿ ಎಲ್ಲ ಪಕ್ಷಗಳಲ್ಲೂ ಈಗ ಅಭ್ಯರ್ಥಿಗಳ ಆಯ್ಕೆ ಕಸರತ್ತು ನಡೆಯುತ್ತಿದೆ. ಕರ್ನಾಟಕದ ಮಟ್ಟಿಗೆ ಕಾಂಗ್ರೆಸ್‌ (Congress Karnataka) ತನ್ನ ಮೊದಲ ಪಟ್ಟಿಯಲ್ಲಿ ಏಳು ಮಂದಿಗೆ ಟಿಕೆಟ್‌ ನೀಡಿದೆ. ಬಿಜೆಪಿ ಇನ್ನು ಎರಡು – ಮೂರು ದಿನಗಳಲ್ಲಿ ಬಿಡುಗಡೆ ಮಾಡುವ ಸಾಧ್ಯತೆ ಇದೆ. ಈ ನಿಟ್ಟಿನಲ್ಲಿ ನವ ದೆಹಲಿಯಲ್ಲಿ ಟಿಕೆಟ್‌ಗೆ ವಿಚಾರವಾಗಿ ಸರಣಿ ಸಭೆಗಳು ನಡೆಯುತ್ತಲಿದೆ. ಈ ನಡುವೆ ಹಾವೇರಿ ಲೋಕಸಭಾ ಕ್ಷೇತ್ರದ (Haveri Lok Sabha constituency) ಮೇಲೆ ಮಾಜಿ ಸಚಿವ ಕೆ.ಎಸ್.‌ ಈಶ್ವರಪ್ಪ (KS Eshwarappa) ಪುತ್ರ ಕೆ.ಇ. ಕಾಂತೇಶ್‌ ಕಣ್ಣಿಟ್ಟಿದ್ದಾರೆ. ಅವರಿಗೆ ಟಿಕೆಟ್‌ ನೀಡುವಂತೆ ಲಾಬಿ ಶುರುವಾಗಿದೆ. ಈ ಬಗ್ಗೆ ಈಗ ಮಾಜಿ ಸಿಎಂ ಬಿ.ಎಸ್.‌ ಯಡಿಯೂರಪ್ಪ (BS Yediyurappa) ಅವರ ಮೇಲೆ ಒತ್ತಡ ಬರುತ್ತಿದ್ದು, ಅವರೂ ಸಹ ಧನಾತ್ಮಕವಾಗಿ ಪ್ರತಿಕ್ರಿಯೆ ನೀಡಿದ್ದಾರೆ. ತಮ್ಮ ಜತೆ ನವ ದೆಹಲಿಗೆ ಈಶ್ವರಪ್ಪ ಅವರು ಬಂದರೆ ಗೃಹ ಸಚಿವ ಅಮಿತ್‌ ಶಾ (Amit Shah) ಅವರನ್ನು ಭೇಟಿ ಮಾಡಿ ಮಾತುಕತೆ ನಡೆಸಬಹುದು ಎಂದು ಬಹಿರಂಗ ಆಹ್ವಾನ ನೀಡಿದ್ದಾರೆ.

ಈ ಬಗ್ಗೆ ಶಿವಮೊಗ್ಗದಲ್ಲಿ ಮಾಜಿ ಸಿಎಂ ಬಿ.ಎಸ್.‌ ಯಡಿಯೂರಪ್ಪ ಅವರನ್ನು ಕಾಂತೇಶ್‌ ಬೆಂಬಲಿಗರು ಭೇಟಿ ಮಾಡಿ ಮನವಿ ಮಾಡಿದ್ದಾರೆ. ಅವರಿಗೆ ಹಾವೇರಿ ಲೋಕಸಭಾ ಟಿಕೆಟ್‌ ನೀಡುವಂತೆ ಒತ್ತಾಯ ಮಾಡಿದ್ದಾರೆ. ಇದಕ್ಕೆ ಬಿಎಸ್‌ವೈ ಸಹ ಸಕಾರಾತ್ಮಕವಾಗಿ ಸ್ಪಂದಿಸಿದ್ದಾರೆ ಎನ್ನಲಾಗಿದೆ.

ಬಳಿಕ ಮಾತನಾಡಿದ ಬಿ.ಎಸ್.‌ ಯಡಿಯೂರಪ್ಪ, ಕಾಂತೇಶ್‌ಗೆ ಟಿಕೆಟ್‌ ಕೊಡಿಸುವ ಬಗ್ಗೆ ನಾನು ಪ್ರಾಮಾಣಿಕ ಪ್ರಯತ್ನವನ್ನು ಮಾಡುತ್ತೇನೆ. ದಯವಿಟ್ಟು ಈಶ್ವರಪ್ಪ ಅವರಿಗೆ ದೆಹಲಿಗೆ ಬರುವುದಕ್ಕೆ ಹೇಳಿ. ಅವರು ಅಲ್ಲಿಗೆ ಬಂದರೆ ಗೃಹ ಸಚಿವ ಅಮಿತ್ ಶಾ ಜತೆ ಮನವಿ ಮಾಡಿಕೊಳ್ಳಲು ಅನುಕೂಲ ಆಗುತ್ತದೆ. ಈಶ್ವರಪ್ಪ ಅವರ ಜತೆಗೆ ನಾನು ಇರುತ್ತೇನೆ. ನಿನ್ನೆ ಕೇಂದ್ರ ಸಚಿವ ಪ್ರಲ್ಹಾದ್ ಜೋಶಿ ಅವರನ್ನು ಈಶ್ವರಪ್ಪ ಭೇಟಿ ಮಾಡಿದ್ದಾರೆ. ನಾನೇ ಅಲ್ಲಿಗೆ ಅವರನ್ನು ಕಳಿಸಿದ್ದೆ. ಈಶ್ವರಪ್ಪ ಬೇರೆ ಅಲ್ಲ, ನಾನು ಬೇರೆ ಅಲ್ಲ ಎಂದು ಬಿಜೆಪಿ ಕಾರ್ಯಕರ್ತರಿಗೆ ಹೇಳಿದರು.

ಕಾಲ ಮಿಂಚಿಲ್ಲ ಎಂದ ಬಿಎಸ್‌ವೈ

ಬಳಿಕ ಮಾಧ್ಯಮದವರೊಂದಿಗೆ ಮಾತನಾಡಿದ ಬಿ.ಎಸ್.‌ ಯಡಿಯೂರಪ್ಪ, ಚುನಾವಣೆ ಸಮಿತಿ ಸಭೆಯನ್ನು ಸೋಮವಾರ (ಮಾ. 11) ಮತ್ತೆ ಕರೆಯಬಹುದು. ಈ ಸಭೆಯಲ್ಲಿ ಪ್ರಧಾನಿ ನರೇಂದ್ರ ಮೋದಿ ಅವರೂ ಭಾಗಿಯಾಗಬಹುದು. ಹಾಗಾಗಿ ಒಂದು ದಿನ ಸಭೆಯನ್ನು ಮುಂದೂಡಿದ್ದಾರೆ. ನಾನು ಈಗ ಬೆಂಗಳೂರಿಗೆ ಹೋಗುತ್ತಿದ್ದೇನೆ ಎಂದು ಹೇಳಿದರು.

ಇದನ್ನೂ ಓದಿ: Fraud Case : ಬ್ರಾಂಡೆಡ್‌ ಹೆಸರಲ್ಲಿ ನಕಲಿ ಡಿಟರ್ಜೆಂಟ್ ಪೌಡರ್‌ಗಳ ಮಾರಾಟ! ಕಳ್ಳಾಟ ಬಯಲು ಮಾಡಿದ ಪೊಲೀಸರು

ಬನ್ನಿ ಈಶ್ವರಪ್ಪನವರೇ

ಈಶ್ವರಪ್ಪ ಪುತ್ರ ಕಾಂತೇಶ್‌ಗೆ ಬಿಜೆಪಿ ಟಿಕೆಟ್ ವಿಚಾರದ ಬಗ್ಗೆ ಮಾಧ್ಯಮದವರು ಕೇಳಿದ ಪ್ರಶ್ನೆಗೆ ಉತ್ತರಿಸಿದ ಬಿ.ಎಸ್.‌ ಯಡಿಯೂರಪ್ಪ, ಈಶ್ವರಪ್ಪ ಪುತ್ರನಿಗೆ ಟಿಕೆಟ್ ಕೊಡಿಸಲು ಶಕ್ತಿ‌‌ಮೀರಿ ಪ್ರಯತ್ನ ಮಾಡುತ್ತೇನೆ. ಈಗಲೂ ಕಾಲ ಮಿಂಚಿಲ್ಲ, ಅವರು ನನ್ನ ಜತೆ ಬಂದರೆ ದೆಹಲಿಗೆ ಕರೆದುಕೊಂಡು ಹೋಗುತ್ತೇನೆ. ಅಮಿತ್ ಶಾ ಜತೆ ಮಾತನಾಡಿಸುತ್ತೇನೆ. ಸೀಟ್ ಕೊಡಿಸಲು ನನ್ನಿಂದ ಆಗುವ ಎಲ್ಲ ಪ್ರಯತ್ನ ಮಾಡುತ್ತೇನೆ. ಎಲ್ಲ ರೀತಿಯ ಪ್ರಯತ್ನ ಮಾಡಲು ನಾನು ಸಿದ್ಧ ಇದ್ದೇನೆ. ಈಶ್ವರಪ್ಪ ಬಂದರೆ ಜತೆಗೆ ಕರೆದುಕೊಂಡು ಮಾತನಾಡಬಹುದು. ನಿಮ್ಮ (ಮಾಧ್ಯಮಗಳ) ಮೂಲಕ ಅವರಿಗೆ ಮನವಿ ಮಾಡ್ತೇನೆ. ದಯವಿಟ್ಟು ಬನ್ನಿ ಈಶ್ವರಪ್ಪನವರೇ ದೆಹಲಿಗೆ ಹೋಗೋಣ ಎಂದು ಹೇಳಿದರು.

ಕ್ಷಣ ಕ್ಷಣದ ಮಾಹಿತಿಗಾಗಿ Vistara News FaceBook ಪೇಜ್ ಫಾಲೋ ಮಾಡಿ
ಮಹತ್ವದ ಮಾಹಿತಿಗಾಗಿ ವಿಸ್ತಾರ ನ್ಯೂಸ್ ಆ್ಯಪ್ ಉಚಿತವಾಗಿ ಡೌನ್ ಲೋಡ್ ಮಾಡಿಕೊಳ್ಳಿ: Andriod App | IOS App
Continue Reading
Click to comment

Leave a Reply

Your email address will not be published. Required fields are marked *

ಕರ್ನಾಟಕ

Election Results 2024: ಹಾಸನದಲ್ಲಿ ಜೆಡಿಎಸ್‌ ಮುನ್ನಡೆ; ಪ್ರಜ್ವಲ್ ರೇವಣ್ಣಗೆ ಇಲ್ಲ ಫಲಿತಾಂಶ ನೋಡುವ ಭಾಗ್ಯ!

Election Results 2024: ಚುನಾವಣೆ ಫಲಿತಾಂಶ ವೀಕ್ಷಿಸಲು ಟಿವಿ ವ್ಯವಸ್ಥೆ ಮಾಡಿ ಎಂದು ಎಸ್ಐಟಿ ಮುಂದೆ ಪ್ರಜ್ಬಲ್ ಬೇಡಿಕೆ ಇಟ್ಟಿದ್ದಾರೆ. ಆದರೆ, ಅಧಿಕಾರಿಗಳು ನಿರಾಕರಿಸಿದ್ದಾರೆ ಎನ್ನಲಾಗಿದೆ.

VISTARANEWS.COM


on

Election Results 2024
Koo

ಬೆಂಗಳೂರು: ಲೈಂಗಿಕ ದೌರ್ಜನ್ಯ ಪ್ರಕರಣದಲ್ಲಿ ಎಸ್‌ಐಟಿ ಕಸ್ಟಡಿಯಲ್ಲಿರುವ ಪ್ರಜ್ವಲ್‌ ರೇವಣ್ಣ ತಮ್ಮ ಕ್ಷೇತ್ರದ ಚುನಾವಣಾ ಫಲಿತಾಂಶ (Election Results 2024) ನೋಡಲಾಗದ ಸ್ಥಿತಿಯಲ್ಲಿ ಇದ್ದಾರೆ. ಒಂದೆಡೆ ಹಾಸನದಲ್ಲಿ ಜೆಡಿಎಸ್‌ ಮುನ್ನಡೆಯಲ್ಲಿದ್ದರೆ, ಮತ್ತೊಂದೆಡೆ ಮೈತ್ರಿ ಅಭ್ಯರ್ಥಿ ಪ್ರಜ್ವಲ್ ಫಲಿತಾಂಶ ನೋಡಲಾಗದೆ, ಕೇಳಲಾಗದೆ ಪರಿತಪಿಸುತ್ತಿದ್ದಾರೆ.

ಹಾಸನದ ಮತ ಎಣಿಕೆ ತೀವ್ರ ಕುತೂಹಲ ಮೂಡಿಸಿದ್ದು, ಪ್ರಜ್ವಲ್‌ ರೇವಣ್ಣ ಒಮ್ಮೆ ಹಿನ್ನಡೆ, ಮತ್ತೊಮ್ಮೆ ಮುನ್ನಡೆ ಸಾಧಿಸುತ್ತಿದ್ದಾರೆ. ಸದ್ಯ ಪ್ರಜ್ವಲ್‌ 3009 ಮತಗಳ ಮುನ್ನಡೆಯಲ್ಲಿದ್ದಾರೆ. ಫಲಿತಾಂಶ ವೀಕ್ಷಿಸಲು ಟಿವಿ ವ್ಯವಸ್ಥೆ ಮಾಡಿ ಎಂದು ಎಸ್ಐಟಿ ಮುಂದೆ ಪ್ರಜ್ಬಲ್ ಬೇಡಿಕೆ ಇಟ್ಟಿದ್ದಾರೆ. ಆದರೆ, ಟಿವಿ ವ್ಯವಸ್ಥೆಗೆ ಕೋರ್ಟ್ ಅನುಮತಿ ಬೇಕೆಂದು ಎಸ್ಐಟಿ ತನಿಖಾಧಿಕಾರಿ ಹೇಳಿದ್ದಾರೆ. ಹೀಗಾಗಿ ಎಸ್ಐಟಿ ಸೆಲ್‌ನಲ್ಲಿ ಪ್ರಜ್ವಲ್ ಡಲ್ಲಾಗಿ ಅತ್ತಿಂದಿತ್ತ ಓಡಾಡಿಕೊಂಡಿದ್ದಾರೆ.

ಇದನ್ನೂ ಓದಿ | Election Results 2024 : ಲೋಕಸಭಾ ಚುನಾವಣಾ ಮತ ಎಣಿಕೆ ಆರಂಭ; ಇವಿಎಂಗಳಲ್ಲಿದ್ದ ಪಕ್ಷಗಳ ಭವಿಷ್ಯ ಬಹಿರಂಗ

ಬೆಂ.ಗ್ರಾಮಾಂತರದಲ್ಲಿ ಡಾ.ಸಿ.ಎನ್.ಮಂಜುನಾಥ್‌ ಭರ್ಜರಿ ಮುನ್ನಡೆ

ಹೈ ವೋಲ್ಟೇಜ್‌ ಸ್ಪರ್ಧೆಯ ಕ್ಷೇತ್ರವಾಗಿರುವ ಬೆಂಗಳೂರು ಗ್ರಾಮಾಂತರದಲ್ಲಿ (Bangalore Rural Lok Sabha Constituency) ಮತ ಎಣಿಕೆ (vote counting) ಕಾರ್ಯ ಸಾಂಗವಾಗಿ ನಡೆಯುತ್ತಿದ್ದು, ಬಿಜೆಪಿ ಅಭ್ಯರ್ಥಿ ಡಾ. ಸಿ.ಎನ್‌ ಮಂಜುನಾಥ್‌ (Dr CN Manjunath) ಭರ್ಜರಿ ಮುನ್ನಡೆ ಸಾಧಿಸಿದ್ದಾರೆ. 9 ಗಂಟೆಯ ಹೊತ್ತಿಗೆ ತಮ್ಮ ಪ್ರತಿಸ್ಪರ್ಧಿ ಕಾಂಗ್ರೆಸ್‌ನ ಡಿ.ಕೆ ಸುರೇಶ್‌ (DK Suresh) ಅವರಿಗಿಂತ 50,000 ಮತಗಳ ಮುನ್ನಡೆ (Election results 2024) ಕಾಯ್ದುಕೊಂಡಿದ್ದಾರೆ.

ಇದನ್ನೂ ಓದಿ | Election Result 2024: ವಾರಾಣಸಿಯಲ್ಲಿ ಮೋದಿಗೆ ಆಘಾತ; 6,223 ಮತಗಳ ಹಿನ್ನಡೆ

ಮಂಡ್ಯದಲ್ಲಿ ಎಚ್‌ಡಿಕೆ 33,168 ಮತಗಳ ಲೀಡ್‌

ಮಂಡ್ಯದಲ್ಲಿ ಜೆಡಿಎಸ್​​ (ಮೈತ್ರಿ ಅಭ್ಯರ್ಥಿ) ಎಚ್.ಡಿ.ಕುಮಾರಸ್ವಾಮಿ 33,168 ಮತಗಳ ಅಂತರದಿಂದ ಮುನ್ನಡೆಯಲ್ಲಿದ್ದಾರೆ. ಮೈಸೂರು-ಕೊಡಗು ಕ್ಷೇತ್ರದಲ್ಲಿ ಬಿಜೆಪಿ ಅಭ್ಯರ್ಥಿ ಯದುವೀರ್ 26018 ಮತಗಳ ಮುನ್ನಡೆಯಲ್ಲಿದ್ದಾರೆ. ಚಿಕ್ಕಬಳ್ಳಾಪುರದಲ್ಲಿ ಬಿಜೆಪಿ ಅಭ್ಯರ್ಥಿ ಡಾ ಕೆ ಸುಧಾಕರ್ 7790 ಮತಗಳ ಮುನ್ನಡೆ ಕಾಯ್ದುಕೊಂಡಿದ್ದಾರೆ. ಚಿಕ್ಕೋಡಿ ಕ್ಷೇತ್ರದಲ್ಲಿ ಕಾಂಗ್ರೆಸ್ ಅಭ್ಯರ್ಥಿ ಪ್ರಿಯಾಂಕಾ ಜಾರಕಿಹೊಳಿ 32936 ಮತಗಳ ಭಾರಿ ಮುನ್ನಡೆ ಸಾಧಿಸಿದ್ದಾರೆ.

Continue Reading

ಪ್ರಮುಖ ಸುದ್ದಿ

Election Results 2024: ಬಿಹಾರದಲ್ಲಿ ಕಾಂಗ್ರೆಸ್-ಆರ್‌ಜೆಡಿಗೆ ಭಾರಿ ಹಿನ್ನಡೆ; ಬಿಜೆಪಿ-ಜೆಡಿಯು ಜಯಭೇರಿಯತ್ತ

Election Results 2024: ಬಿಹಾರ ಲೋಕಸಭಾ ಚುನಾವಣೆಯ ಮತದಾನ ಏಳು ಹಂತಗಳಲ್ಲಿ ನಡೆದಿತ್ತು. ಸಂಸತ್ತಿನ ಕೆಳಮನೆಯಾದ ಲೋಕಸಭೆಗೆ ಬಿಹಾರವು 40 ಸದಸ್ಯರನ್ನು ಕೊಡುಗೆಯಾಗಿ ನೀಡಿರುವುದರಿಂದ ಈ ಚುನಾವಣೆಯು ವಿಶೇಷವಾಗಿ ನಿರ್ಣಾಯಕವಾಗಿದೆ.

VISTARANEWS.COM


on

election resluts 2024 nitish kumar tejaswi yadav
Koo

ಹೊಸದಿಲ್ಲಿ: ಲೋಕಸಭೆ ಚುನಾವಣೆಯ ಮತ ಎಣಿಕೆ (Election Results 2024) ಪ್ರಾರಂಭವಾಗುತ್ತಿದ್ದಂತೆ, ಬಿಹಾರದ (Bihar election results 2024) ರಾಜಕೀಯ ವಾತಾವರಣದ ಕಾವು ಜ್ವರದಂತೆ ಏರಿತು. ಒಟ್ಟು 40 ಕ್ಷೇತ್ರಗಳಲ್ಲಿ 28 ಸ್ಥಾನಗಳಲ್ಲಿ ಬಿಜೆಪಿ- ಜೆಡಿಯು ಭರ್ಜರಿ ಮುನ್ನಡೆ ಕಾಯ್ದುಕೊಂಡಿದೆ. ಕಾಂಗ್ರೆಸ್-ಆರ್‌ಜೆಡಿ ರೇಸ್‌ನಲ್ಲಿ ಹಿಂದುಳಿದಿವೆ.

ಬಿಹಾರ ಲೋಕಸಭಾ ಚುನಾವಣೆಯ ಮತದಾನ ಏಳು ಹಂತಗಳಲ್ಲಿ ನಡೆದಿತ್ತು. ಸಂಸತ್ತಿನ ಕೆಳಮನೆಯಾದ ಲೋಕಸಭೆಗೆ ಬಿಹಾರವು 40 ಸದಸ್ಯರನ್ನು ಕೊಡುಗೆಯಾಗಿ ನೀಡಿರುವುದರಿಂದ ಈ ಚುನಾವಣೆಯು ವಿಶೇಷವಾಗಿ ನಿರ್ಣಾಯಕವಾಗಿದೆ. ಸಂಸತ್ತಿನ 543 ಸ್ಥಾನಗಳಲ್ಲಿ ಯಾವ ಪಕ್ಷ ಅಥವಾ ಒಕ್ಕೂಟ ಬಹುಮತದ 272 ಸೀಟುಗಳನ್ನು ಸಾಧಿಸುತ್ತದೆ ಎಂಬುದನ್ನು ನಿರ್ಧರಿಸುವಲ್ಲಿ ಬಿಹಾರದ ಸ್ಥಾನಗಳಿಕೆ ನಿರ್ಣಾಯಕ ಪಾತ್ರವನ್ನು ವಹಿಸಲಿದೆ.

ಪ್ರಮುಖ ಅಭ್ಯರ್ಥಿಗಳು

ಬಿಹಾರ ರಾಜ್ಯ ಪ್ರಮುಖ ರಾಜಕೀಯ ಪಕ್ಷಗಳ ಅಭ್ಯರ್ಥಿಗಳನ್ನು ಒಳಗೊಂಡಿದೆ. ಇಂಡಿಯಾ ಮತ್ತು ಎನ್‌ಡಿಎ ಮೈತ್ರಿಕೂಟಗಳ ಇತರ ಪ್ರಭಾವಿ ಅಭ್ಯರ್ಥಿಗಳ ಜೊತೆಗೆ ನಿತೀಶ್ ಕುಮಾರ್ (ಜೆಡಿಯು), ಚಿರಾಗ್ ಪಾಸ್ವಾನ್ (ಜನಶಕ್ತಿ ಪಕ್ಷ), ತೇಜಸ್ವಿ ಯಾದವ್ (ಆರ್‌ಜೆಡಿ), ಸಾಮ್ರಾಟ್ ಚೌಧರಿ (ಬಿಜೆಪಿ) ಪ್ರಾಬಲ್ಯಕ್ಕಾಗಿ ಸ್ಪರ್ಧಿಸುತ್ತಿದ್ದಾರೆ. ಸರನ್ ಲೋಕಸಭಾ ಕ್ಷೇತ್ರದಲ್ಲಿ ಬಿಜೆಪಿಯ ರಾಜೀವ್ ಪ್ರತಾಪ್ ರೂಡಿ ಮತ್ತು ರೋಹಿಣಿ ಆಚಾರ್ಯ ನಡುವೆ ತೀವ್ರ ಪೈಪೋಟಿ ಏರ್ಪಟ್ಟಿದೆ.

ಕಳೆದ ಬಾರಿ ಫಲಿತಾಂಶ ಹೇಗಿತ್ತು?

2019ರ ಲೋಕಸಭೆ ಚುನಾವಣೆಯಲ್ಲಿ ಬಿಹಾರದಲ್ಲಿ ಎನ್‌ಡಿಎ 40 ಸ್ಥಾನಗಳಲ್ಲಿ 39 ಸ್ಥಾನಗಳನ್ನು ಗೆದ್ದುಕೊಂಡಿತ್ತು. ಬಿಜೆಪಿ 17 ಸ್ಥಾನಗಳನ್ನು ಗೆದ್ದುಕೊಂಡಿದ್ದರೆ, ಜೆಡಿಯು 16 ಸ್ಥಾನಗಳನ್ನು ಗಳಿಸಿತು ಮತ್ತು ಎಲ್‌ಜೆಪಿ 6 ಸ್ಥಾನಗಳನ್ನು ಪಡೆದುಕೊಂಡಿತು. ಕಾಂಗ್ರೆಸ್ ಕೇವಲ ಒಂದು ಸ್ಥಾನವನ್ನು ಗೆಲ್ಲುವಲ್ಲಿ ಯಶಸ್ವಿಯಾಗಿದ್ದರೆ, ತೇಜಸ್ವಿ ಯಾದವ್ ನೇತೃತ್ವದ ಆರ್‌ಜೆಡಿ ಒಂದನ್ನು ಗೆಲ್ಲಲು ವಿಫಲವಾಗಿದೆ.

2014ರ ಸಾರ್ವತ್ರಿಕ ಚುನಾವಣೆಗಳು ವಿಭಿನ್ನ ಸನ್ನಿವೇಶದಲ್ಲಿದ್ದವು. ಆ ಸಮಯದಲ್ಲಿ ಜೆಡಿಯು ಜೊತೆ ಮೈತ್ರಿ ಮಾಡಿಕೊಂಡಿರದಿದ್ದ ಬಿಜೆಪಿ ಬಿಹಾರದಲ್ಲಿ 23 ಸ್ಥಾನಗಳನ್ನು ಗೆದ್ದು ದೊಡ್ಡ ಪಕ್ಷವಾಗಿ ಹೊರಹೊಮ್ಮಿತ್ತು. ಅದರ ಮಿತ್ರ ಪಕ್ಷ ಎಲ್‌ಜೆಪಿ 6 ಸ್ಥಾನಗಳನ್ನು ಗೆದ್ದಿತ್ತು. ಏಕಾಂಗಿಯಾಗಿ ಸ್ಪರ್ಧಿಸಿದ್ದ ಜೆಡಿಯು ಕೇವಲ 2 ಸ್ಥಾನಗಳಲ್ಲಿ ಮಾತ್ರ ಗೆಲುವು ಸಾಧಿಸಿತ್ತು. ಮಹಾಘಟಬಂಧನ ಭಾಗವಾದ ಕಾಂಗ್ರೆಸ್ 2 ಸ್ಥಾನಗಳನ್ನು ಗೆದ್ದಿದೆ. ಇದು 2019ಕ್ಕೆ ಸಂಪೂರ್ಣವಾಗಿ ವ್ಯತಿರಿಕ್ತವಾಗಿತ್ತು.

ಇಂಡಿಯಾ ಟುಡೇ-ಆಕ್ಸಿಸ್ ಮೈ ಇಂಡಿಯಾದ ಎಕ್ಸಿಟ್ ಪೋಲ್ ಫಲಿತಾಂಶಗಳ ಪ್ರಕಾರ, ಮಾಜಿ ಕೇಂದ್ರ ಸಚಿವ ಮತ್ತು ಬಿಜೆಪಿ ಅಭ್ಯರ್ಥಿ ರವಿಶಂಕರ್ ಪ್ರಸಾದ್ ಅವರು ಪಾಟ್ನಾ ಸಾಹಿಬ್ ಲೋಕಸಭಾ ಕ್ಷೇತ್ರದಲ್ಲಿ ಗೆಲ್ಲುವ ನಿರೀಕ್ಷೆಯಿದೆ.

ಇದನ್ನೂ ಓದಿ: Election results 2024: ಬೆಂಗಳೂರು ಗ್ರಾಮಾಂತರದಲ್ಲಿ ಬಿಜೆಪಿ ಅಭ್ಯರ್ಥಿ ಡಾ. ಮಂಜುನಾಥ್‌ ಭರ್ಜರಿ ಮುನ್ನಡೆ

Continue Reading

ದೇಶ

Election Result 2024: ವಾರಾಣಸಿಯಲ್ಲಿ ಮೋದಿಗೆ ಆಘಾತ; 6,223 ಮತಗಳ ಹಿನ್ನಡೆ

Election Result 2024: ಲೋಕಸಭೆ ಸಮರದ ಮತಎಣಿಕೆ ಆರಂಭವಾಗಿದ್ದು, ಆರಂಭಿಕ ಹಂತದಲ್ಲಿಯೇ ಕರ್ನಾಟಕ ಹಾಗೂ ದೇಶದಲ್ಲಿ ಎನ್‌ಡಿಎ ಮೈತ್ರಿಕೂಟವು ಭರ್ಜರಿ ಮುನ್ನಡೆ ಸಾಧಿಸಿದೆ. ಅತ್ತ, ದೇಶದ ಮಟ್ಟದಲ್ಲಿ ಎನ್‌ಡಿಎ ಮೈತ್ರಿಕೂಟವು ಸ್ಪರ್ಧೆಯೊಡ್ಡುವ ಲಕ್ಷಣಗಳು ಗೋಚರಿಸಿವೆ. ಇದರ ಬೆನ್ನಲ್ಲೇ, ವಾರಾಣಸಿಯಲ್ಲಿ ನರೇಂದ್ರ ಮೋದಿ ಅವರು ಹಿನ್ನಡೆ ಅನುಭವಿಸಿದ್ದಾರೆ.

VISTARANEWS.COM


on

Election Result 2024
Koo

ನವದೆಹಲಿ: ದೇಶಕ್ಕೆ ದೇಶವೇ ಕುತೂಹಲದಿಂದ ಕಾಯುತ್ತಿರುವ ಲೋಕಸಭೆ ಚುನಾವಣೆಯ ಮತಎಣಿಕೆ (Lok Sabha Election Result 2024) ಆರಂಭವಾಗಿದ್ದು, ಎನ್‌ಡಿಎ ಮೈತ್ರಿಕೂಟವು (NDA) ಆರಂಭದಲ್ಲಿಯೇ ಭರ್ಜರಿ ಮುನ್ನಡೆ ಸಾಧಿಸಿದೆ. ಎನ್‌ಡಿಎಯು 294ಕ್ಕೂ ಅಧಿಕ ಕ್ಷೇತ್ರಗಳಲ್ಲಿ ಮುನ್ನಡೆ ಸಾಧಿಸಿದ್ದು, ಮುನ್ನಡೆಯಲ್ಲಿಯೇ ಮ್ಯಾಜಿಕ್‌ ನಂಬರ್‌ (272) ದಾಟಿದೆ. ಅತ್ತ, ಇಂಡಿಯಾ ಒಕ್ಕೂಟವೂ (India Bloc) ಎನ್‌ಡಿಎಗೆ ಸ್ಪರ್ಧೆಯೊಡ್ಡುತ್ತಿದ್ದು, 212ಕ್ಕೂ ಅಧಿಕ ಕ್ಷೇತ್ರಗಳಲ್ಲಿ ಮುನ್ನಡೆ ಸಾಧಿಸಿದೆ. ಇದರ ಬೆನ್ನಲ್ಲೇ ಪ್ರಧಾನಿ ನರೇಂದ್ರ ಮೋದಿ ಅವರಿಗೆ ವಾರಾಣಸಿಯಲ್ಲಿ ಹಿನ್ನಡೆಯಾಗಿದೆ.

ಹೌದು, ಉತ್ತರ ಪ್ರದೇಶದ ವಾರಾಣಸಿ ಲೋಕಸಭೆ ಕ್ಷೇತ್ರದಲ್ಲಿ ಪ್ರಧಾನಿ ನರೇಂದ್ರ ಮೋದಿ ಅವರಿಗೆ 6,223 ಮತಗಳ ಹಿನ್ನಡೆಯಾಗಿದೆ. ಕಾಂಗ್ರೆಸ್‌ನ ಅಜಯ್‌ ರಾಯ್‌ ಅವರು ಆರಂಭಿಕ ಹಂತದ ಮತಎಣಿಕೆಯಲ್ಲಿ 11,480 ಮತಗಳನ್ನು ಪಡೆದರೆ, ನರೇಂದ್ರ ಮೋದಿ ಅವರು 5,257 ಮತಗಳನ್ನಷ್ಟೇ ಪಡೆದು ಹಿನ್ನಡೆ ಅನುಭವಿಸಿದ್ದಾರೆ. ಕಳೆದ ಎರಡು ಚುನಾವಣೆಗಳಲ್ಲಿ ನರೇಂದ್ರ ಮೋದಿ ಅವರು ವಾರಾಣಸಿಯಲ್ಲಿ ಅಮೋಘ ಲೀಡ್‌ ಪಡೆದು ಗೆಲುವು ಸಾಧಿಸಿದ್ದರು. ಈಗ ಆರಂಭಿಕ ಹಂತದಲ್ಲಿಯೇ ಅವರಿಗೆ ಹಿನ್ನಡೆಯಾಗಿದೆ.

ನರೇಂದ್ರ ಮೋದಿ ಅವರ ಅಲೆ, ಕಳೆದ 10 ವರ್ಷಗಳ ಅಭಿವೃದ್ಧಿ ಕೆಲಸಗಳು, ರಾಮಮಂದಿರ, 370ನೇ ವಿಧಿ ರದ್ದು ಸೇರಿ ಹಲವು ಪ್ರಮುಖ ತೀರ್ಮಾನಗಳನ್ನು ಮುಂದಿಟ್ಟುಕೊಂಡು ಬಿಜೆಪಿಯು ಚುನಾವಣೆ ಎದುರಿಸಿದೆ. ಅದರಲ್ಲೂ, ಮೋದಿ ಅವರು 200ಕ್ಕೂ ಅಧಿಕ ಸಮಾವೇಶಗಳ ಮೂಲಕ ದೇಶದ ಮೂಲೆ ಮೂಲೆಯಲ್ಲಿ ಅಬ್ಬರದ ಪ್ರಚಾರ ಕೈಗೊಂಡಿದ್ದಾರೆ. ಬಿಜೆಪಿ ನಾಯಕರು, ಕಾರ್ಯಕರ್ತರು ಕೂಡ ಇದಕ್ಕೆ ಶ್ರಮಿಸಿದ್ದಾರೆ. ಹಾಗಾಗಿ, ಬಿಜೆಪಿಯು ಸತತ ಮೂರನೇ ಬಾರಿಗೆ ಕೇಂದ್ರದಲ್ಲಿ ಅಧಿಕಾರದ ಗದ್ದುಗೆ ಹಿಡಿಯು ಕನಸು ಕಾಣುತ್ತಿದೆ.

ಬಿಜೆಪಿಯನ್ನು ಶತಾಯ ಗತಾಯ ಸೋಲಿಸಬೇಕು ಎಂಬ ಕಾರಣಕ್ಕಾಗಿಯೇ ಕಾಂಗ್ರೆಸ್‌ ಮುಂದಾಳತ್ವದಲ್ಲಿ ಇಂಡಿಯಾ ಒಕ್ಕೂಟವನ್ನು ರಚಿಸಿ, ಪ್ರತಿಪಕ್ಷಗಳು ಒಗ್ಗೂಡಿ ಚುನಾವಣೆ ಎದುರಿಸಿವೆ. ಮತಗಟ್ಟೆ ಸಮೀಕ್ಷೆಗಳ ವರದಿಗಳ ಆಚೆಯೂ ಅಚ್ಚರಿಯ ಫಲಿತಾಂಶವನ್ನು ಇಂಡಿಯಾ ಒಕ್ಕೂಟದ ಪಕ್ಷಗಳು ನಿರೀಕ್ಷಿಸುತ್ತಿವೆ. ಹಾಗೊಂದು ವೇಳೆ, ಮತಗಟ್ಟೆ ಸಮೀಕ್ಷೆಗಳು ಉಲ್ಟಾ ಹೊಡೆದರೆ, ಇಂಡಿಯಾ ಮೈತ್ರಿಕೂಟವು ಮುನ್ನಡೆ ಸಾಧಿಸಲಿದೆ. ಆದರೆ, ಆರಂಭಿಕ ಹಂತದ ಮತಎಣಿಕೆ ಪ್ರಕಾರ, ಎನ್‌ಡಿಎ ಬಾರಿ ಮುನ್ನಡೆ ಸಾಧಿಸಿದೆ.

ಇದನ್ನೂ ಓದಿ: Lok Sabha Election Result 2024 Live: ಲೋಕಸಭೆ ಚುನಾವಣೆ ಫಲಿತಾಂಶದ ಲೈವ್‌ ಇಲ್ಲಿ ವೀಕ್ಷಿಸಿ

Continue Reading

Lok Sabha Election 2024

Election results 2024: ಬೆಂಗಳೂರು ಗ್ರಾಮಾಂತರದಲ್ಲಿ ಬಿಜೆಪಿ ಅಭ್ಯರ್ಥಿ ಡಾ. ಮಂಜುನಾಥ್‌ ಭರ್ಜರಿ ಮುನ್ನಡೆ

Election results 2024: ಮತ ಎಣಿಕೆಯ ಆರಂಭದ ಕ್ಷಣಗಳಿಂದಲೇ ಡಾ. ಮಂಜುನಾಥ್‌ ತಮ್ಮ ಮುನ್ನಡೆಯ ವೇಗವನ್ನು ಕಾಯ್ದುಕೊಂಡರು. ‌ಡಿ.ಕೆ ಸುರೇಶ್‌ ಅವರು ಹಿಂದುಳಿದರು. ಭಾರಿ ಉತ್ಸಾಹದಿಂದ ಮತ ಎಣಿಕೆ ಕೇಂದ್ರಗಳಿಗೆ ಬಂದಿದ್ದ ಕಾಂಗ್ರೆಸ್‌ ಕಾರ್ಯಕರ್ತರಲ್ಲಿ ಆತಂಕ ಮನೆಮಾಡಿದರೆ, ಬಿಜೆಪಿ ಕಾರ್ಯಕರ್ತರು ಉತ್ಸಾಹ ಹೆಚ್ಚಿಸಿಕೊಂಡರು.

VISTARANEWS.COM


on

election results 2024 Lok Sabha Election 2024 Bengaluru Rural Lok Sabha constituency is the most sensitive Election Commission deploys paramilitary forces
Koo

ಬೆಂಗಳೂರು: ಹೈ ವೋಲ್ಟೇಜ್‌ ಸ್ಪರ್ಧೆಯ ಕ್ಷೇತ್ರವಾಗಿರುವ ಬೆಂಗಳೂರು ಗ್ರಾಮಾಂತರದಲ್ಲಿ (Bangalore Rural Lok Sabha Constituency) ಮತ ಎಣಿಕೆ (vote counting) ಕಾರ್ಯ ಸಾಂಗವಾಗಿ ನಡೆಯುತ್ತಿದ್ದು, ಬಿಜೆಪಿ ಅಭ್ಯರ್ಥಿ ಡಾ. ಸಿ.ಎನ್‌ ಮಂಜುನಾಥ್‌ (Dr CN Manjunath) ಭರ್ಜರಿ ಮುನ್ನಡೆ ಸಾಧಿಸಿದ್ದಾರೆ. 9 ಗಂಟೆಯ ಹೊತ್ತಿಗೆ ತಮ್ಮ ಪ್ರತಿಸ್ಪರ್ಧಿ ಕಾಂಗ್ರೆಸ್‌ನ ಡಿ.ಕೆ ಸುರೇಶ್‌ (DK Suresh) ಅವರಿಗಿಂತ 50,000 ಮತಗಳ ಮುನ್ನಡೆ (Election results 2024) ಕಾಯ್ದುಕೊಂಡಿದ್ದಾರೆ.

ಮತ ಎಣಿಕೆಯ ಆರಂಭದ ಕ್ಷಣಗಳಿಂದಲೇ ಡಾ. ಮಂಜುನಾಥ್‌ ತಮ್ಮ ಮುನ್ನಡೆಯ ವೇಗವನ್ನು ಕಾಯ್ದುಕೊಂಡರು. ‌ಡಿ.ಕೆ ಸುರೇಶ್‌ ಅವರು ಹಿಂದುಳಿದರು. ಭಾರಿ ಉತ್ಸಾಹದಿಂದ ಮತ ಎಣಿಕೆ ಕೇಂದ್ರಗಳಿಗೆ ಬಂದಿದ್ದ ಕಾಂಗ್ರೆಸ್‌ ಕಾರ್ಯಕರ್ತರಲ್ಲಿ ಆತಂಕ ಮನೆಮಾಡಿದರೆ, ಬಿಜೆಪಿ ಕಾರ್ಯಕರ್ತರು ಉತ್ಸಾಹ ಹೆಚ್ಚಿಸಿಕೊಂಡರು.

ಬೆಂಗಳೂರು ಗ್ರಾಮಾಂತರ ಲೋಕಸಭೆ ಕ್ಷೇತ್ರ 24 ಲಕ್ಷ ಮತದಾರರನ್ನು ಹೊಂದಿರುವ ದೇಶದ ಪ್ರಮುಖ ಲೋಕಸಭಾ ಕ್ಷೇತ್ರಗಳಲ್ಲಿ ಒಂದಾಗಿದೆ. ಈ ಸ್ಥಾನವು 2008ರಲ್ಲಿ ಕ್ಷೇತ್ರ ಮರುವಿಂಗಡಣೆ ನಂತರ ಅಸ್ತಿತ್ವಕ್ಕೆ ಬಂತು. ಇಲ್ಲಿ ಮೊದಲ ಚುನಾವಣೆ 2009ರಲ್ಲಿ ನಡೆಯಿತು. ಕರ್ನಾಟಕದ ಮಾಜಿ ಮುಖ್ಯಮಂತ್ರಿ ಮತ್ತು ಜೆಡಿಎಸ್ (JDS) ನಾಯಕ ಎಚ್.ಡಿ.ಕುಮಾರಸ್ವಾಮಿ (HD kumaraswmay) ಈ ಕ್ಷೇತ್ರದ ಮೊದಲ ಸಂಸದ. ಆದರೆ, 2013ರ ಉಪಚುನಾವಣೆ ಸೇರಿದಂತೆ ಸತತ ಎರಡು ಬಾರಿ ಕಾಂಗ್ರೆಸ್ ಈ ಸ್ಥಾನವನ್ನು ಗೆದ್ದುಕೊಂಡಿದೆ. ಇಲ್ಲಿನ ಹಾಲಿ ಸಂಸದ ಕರ್ನಾಟಕದ ಡಿಸಿಎಂ ಡಿ.ಕೆ ಶಿವಕುಮಾರ್ (D K Shivakumar) ಅವರ ಸಹೋದರ ಡಿ.ಕೆ ಸುರೇಶ್​.

ಕ್ಷೇತ್ರ ವಿಂಗಡಣೆಗೆ ಮೊದಲು ಇದನ್ನು ಕನಕಪುರ ಲೋಕಸಭಾ ಕ್ಷೇತ್ರವಾಗಿ ಗುರುತಿಸಲಾಗಿತ್ತು. ಮಾಜಿ ಪ್ರಧಾನಿ ಹಾಗೂ ಜೆಡಿಎಸ್ ವರಿಷ್ಠ ಎಚ್. ಡಿ.ದೇವೇಗೌಡ ಅವರು ಇಲ್ಲಿ ಕೊನೇ ಬಾರಿ ಗೆದ್ದಿದ್ದರು. ಎಂ.ವಿ.ಚಂದ್ರಶೇಖರ ಮೂರ್ತಿ ಈ ಕ್ಷೇತ್ರದಿಂದ ಐದು ಬಾರಿ ಸಂಸದರಾಗಿ ಆಯ್ಕೆಯಾಗಿದ್ದರು. ಈ ಕ್ಷೇತ್ರವು ಎಂಟು ವಿಧಾನಸಭಾ ಕ್ಷೇತ್ರಗಳನ್ನು ಒಳಗೊಂಡಿದೆ. ಅವುಗಳಲ್ಲಿ ಏಳು ಹಿಂದಿನ ಕನಕಪುರ ಲೋಕಸಭಾ ಕ್ಷೇತ್ರದ ಭಾಗವಾಗಿದ್ದವು. ತುಮಕೂರು ಜಿಲ್ಲೆಯ ಕುಣಿಗಲ್ ಜೊತೆಗೆ ಬೆಂಗಳೂರು ದಕ್ಷಿಣ, ಆನೇಕಲ್ ಮತ್ತು ರಾಜರಾಜೇಶ್ವರಿ ನಗರ ಹೊಸ ವಿಧಾನಸಭಾ ಕ್ಷೇತ್ರಗಳು ಇದರ ಭಾಗವಾಗಿವೆ.

ಈ ಬಾರಿ ಕ್ಷೇತ್ರವನ್ನು ಉಳಿಸಿಕೊಳ್ಳಲು ಕಾಂಗ್ರೆಸ್ ಡಿ.ಕೆ.ಸುರೇಶ್ ಅವರನ್ನು ಕಣಕ್ಕಿಳಿಸಿದೆ. ಬಿಜೆಪಿ-ಜೆಡಿಎಸ್ ಮೈತ್ರಿಕೂಟವು ಕಾಂಗ್ರೆಸ್ ಅಭ್ಯರ್ಥಿಯನ್ನು ಎದುರಿಸಲು ಎಚ್.ಡಿ.ಕುಮಾರಸ್ವಾಮಿ ಅವರ ಭಾವ ಡಾ.ಸಿ.ಎನ್.ಮಂಜುನಾಥ್ ಅವರನ್ನು ನಿಲ್ಲಿಸಿದೆ. 2014ರ ಚುನಾವಣೆಯಲ್ಲಿ ಮೋದಿ ಅಲೆಯ ನಡುವೆಯೂ ಬೆಂಗಳೂರು ಗ್ರಾಮಾಂತರ ಕ್ಷೇತ್ರವನ್ನು ಉಳಿಸಿಕೊಳ್ಳುವಲ್ಲಿ ಕಾಂಗ್ರೆಸ್ ಯಶಸ್ವಿಯಾಗಿತ್ತು. ಕಾಂಗ್ರೆಸ್ ಅಭ್ಯರ್ಥಿ ಡಿ.ಕೆ.ಸುರೇಶ್ ಅವರು ಬಿಜೆಪಿಯ ಮುನಿರಾಜು ಗೌಡ ಅವರನ್ನು 2.31 ಲಕ್ಷ ಮತಗಳ ಅಂತರದಿಂದ ಸೋಲಿಸಿದ್ದರು. ಸುರೇಶ್ 6.52 ಲಕ್ಷ ಮತಗಳನ್ನು ಪಡೆದರೆ, ಗೌಡರು 4.21 ಲಕ್ಷ ಮತಗಳನ್ನು ಮಾತ್ರ ಪಡೆದರು.

2019ರ ಸಾರ್ವತ್ರಿಕ ಚುನಾವಣೆಯಲ್ಲಿ ಡಿ.ಕೆ.ಸುರೇಶ್ ಅವರು ಬಿಜೆಪಿಯ ಅಶ್ವತ್ಥನಾರಾಯಣ ಗೌಡ ಅವರನ್ನು 2,06,870 ಮತಗಳ ಭಾರೀ ಅಂತರದಿಂದ ಸೋಲಿಸಿದ್ದರು. ಈ ಕ್ಷೇತ್ರದಲ್ಲಿ 2019 ರಲ್ಲಿ ಕಾಂಗ್ರೆಸ್ 54.12% ಮತಗಳನ್ನು ಹೊಂದಿತ್ತು. 2014ರ ಸಾರ್ವತ್ರಿಕ ಚುನಾವಣೆಯಲ್ಲಿ ಡಿ.ಕೆ.ಸುರೇಶ್ ಅವರು ಬಿಜೆಪಿಯ ಮುನಿರಾಜು ಗೌಡ ಪಿ ಅವರನ್ನು 2,31,480 ಮತಗಳ ಭಾರೀ ಅಂತರದಿಂದ ಸೋಲಿಸಿದ್ದರು. ಕಾಂಗ್ರೆಸ್ 44.76% ಮತಗಳನ್ನು ಗಳಿಸಿದೆ.

2009ರ ಸಾರ್ವತ್ರಿಕ ಚುನಾವಣೆಯಲ್ಲಿ ಎಚ್.ಡಿ.ಕುಮಾರಸ್ವಾಮಿ ಅವರು ಬಿಜೆಪಿಯ ಸಿ.ಪಿ.ಯೋಗೀಶ್ವರ್ ಅವರನ್ನು 1,30,275 ಮತಗಳ ಭಾರೀ ಅಂತರದಿಂದ ಸೋಲಿಸಿದ್ದರು. ಈ ಕ್ಷೇತ್ರದಲ್ಲಿ ಜೆಡಿಎಸ್ ಶೇ.44.73ರಷ್ಟು ಮತಗಳನ್ನು ಪಡೆದಿತ್ತು.

ಬೆಂಗಳೂರು ಗ್ರಾಮಾಂತರ ಲೋಕಸಭಾ ಕ್ಷೇತ್ರದ ವ್ಯಾಪ್ತಿಯಲ್ಲಿ ಕುಣಿಗಲ್, ರಾಜರಾಜೇಶ್ವರಿನಗರ, ಬೆಂಗಳೂರು ದಕ್ಷಿಣ, ಆನೇಕಲ್, ಮಾಗಡಿ, ರಾಮನಗರ, ಕನಕಪುರ ಮತ್ತು ಚನ್ನಪಟ್ಟಣ ವಿಧಾನಸಭಾ ಕ್ಷೇತ್ರಗಳಿವೆ. ಕಾಂಗ್ರೆಸ್ 5, ಬಿಜೆಪಿ 2, ಜೆಡಿಎಸ್ 1 ಸ್ಥಾನ ಹೊಂದಿವೆ. ಭಾರತದ ಚುನಾವಣಾ ಆಯೋಗದ ಪ್ರಕಾರ, 2019 ರಲ್ಲಿ ಒಟ್ಟು ಮತದಾರರ ಸಂಖ್ಯೆ 24,97,458. 2019ರಲ್ಲಿ ಶೇ.64.9ರಷ್ಟು ಮತದಾನವಾಗಿತ್ತು. 2011 ರ ಜನಗಣತಿಯ ಅಂಕಿಅಂಶಗಳ ಪ್ರಕಾರ ನಗರ ಮತದಾರರು ಒಟ್ಟು ಮತದಾರ ಪೈಕಿ 54.2% ರಷ್ಟಿದ್ದಾರೆ. ಸರಾಸರಿ ಸಾಕ್ಷರತಾ ಪ್ರಮಾಣವು 68.91% ಆಗಿತ್ತು.

ಇದನ್ನೂ ಓದಿ: Election Results 2024: ಪಶ್ಚಿಮ ಬಂಗಾಲದಲ್ಲಿ ಮತ ಎಣಿಕೆಗೂ ಮುನ್ನ ಬಾಂಬ್‌ ಸ್ಫೋಟ, ಐವರಿಗೆ ಗಾಯ

Continue Reading
Advertisement
Election Results 2024
ಕರ್ನಾಟಕ4 mins ago

Election Results 2024: ಹಾಸನದಲ್ಲಿ ಜೆಡಿಎಸ್‌ ಮುನ್ನಡೆ; ಪ್ರಜ್ವಲ್ ರೇವಣ್ಣಗೆ ಇಲ್ಲ ಫಲಿತಾಂಶ ನೋಡುವ ಭಾಗ್ಯ!

Andhra Assembly Result 2024
ದೇಶ6 mins ago

AP Election Results 2024 Live: ಆಂಧ್ರ ಪ್ರದೇಶ ವಿಧಾನಸಭೆ; ಎನ್‌ಡಿಎಗೆ ಭರ್ಜರಿ ಮುನ್ನಡೆ

election resluts 2024 nitish kumar tejaswi yadav
ಪ್ರಮುಖ ಸುದ್ದಿ7 mins ago

Election Results 2024: ಬಿಹಾರದಲ್ಲಿ ಕಾಂಗ್ರೆಸ್-ಆರ್‌ಜೆಡಿಗೆ ಭಾರಿ ಹಿನ್ನಡೆ; ಬಿಜೆಪಿ-ಜೆಡಿಯು ಜಯಭೇರಿಯತ್ತ

Election Result 2024
ದೇಶ13 mins ago

Election Result 2024: ವಾರಾಣಸಿಯಲ್ಲಿ ಮೋದಿಗೆ ಆಘಾತ; 6,223 ಮತಗಳ ಹಿನ್ನಡೆ

Urfi Javed shares photos of swollen face, accepts
ಬಾಲಿವುಡ್24 mins ago

Urfi Javed: ಉರ್ಫಿ ಜಾವೇದ್‌ಗೆ ಮುಖ ಹೀಗೆ ಊದಿಕೊಳ್ಳುತ್ತೆ; ಆರೋಗ್ಯ ಸಮಸ್ಯೆಯಿಂದ ಬಳಲ್ತಾ ಇದ್ದಾರೆ ಫ್ಯಾಷನ್‌ ಐಕಾನ್‌!

Odisha Assembly Result 2024
ದೇಶ32 mins ago

Odisha Assembly Result 2024: ಅಸೆಂಬ್ಲಿ ಎಲೆಕ್ಷನ್‌; ಮತ ಎಣಿಕೆ ಶುರು-ಒಡಿಶಾದಲ್ಲಿ ಮತ್ತೆ ಗದ್ದುಗೆ ಏರುತ್ತಾ ಬಿಜೆಡಿ?

election results 2024 Lok Sabha Election 2024 Bengaluru Rural Lok Sabha constituency is the most sensitive Election Commission deploys paramilitary forces
Lok Sabha Election 202437 mins ago

Election results 2024: ಬೆಂಗಳೂರು ಗ್ರಾಮಾಂತರದಲ್ಲಿ ಬಿಜೆಪಿ ಅಭ್ಯರ್ಥಿ ಡಾ. ಮಂಜುನಾಥ್‌ ಭರ್ಜರಿ ಮುನ್ನಡೆ

Varun Dhawan Natasha Dalal welcome baby girl
ಬಾಲಿವುಡ್1 hour ago

Varun Dhawan: ಹೆಣ್ಣು ಮಗುವಿಗೆ ತಂದೆಯಾದ ಬಾಲಿವುಡ್ ನಟ ವರುಣ್ ಧವನ್

Crude Bomb west bengal election results 2024
ಪ್ರಮುಖ ಸುದ್ದಿ1 hour ago

Election Results 2024: ಪಶ್ಚಿಮ ಬಂಗಾಲದಲ್ಲಿ ಮತ ಎಣಿಕೆಗೂ ಮುನ್ನ ಬಾಂಬ್‌ ಸ್ಫೋಟ, ಐವರಿಗೆ ಗಾಯ

Lok Sabha Election Result 2024
ದೇಶ1 hour ago

Lok Sabha Election Result 2024: ಮುನ್ನಡೆಯಲ್ಲೇ ಮ್ಯಾಜಿಕ್‌ ನಂಬರ್‌ ದಾಟಿದ ಎನ್‌ಡಿಎ; ಇಂಡಿಯಾ ಒಕ್ಕೂಟ ತೀವ್ರ ಪೈಪೋಟಿ

Sharmitha Gowda in bikini
ಕಿರುತೆರೆ8 months ago

Geetha Serial Kannada: ನಿದ್ದೆ ಕದ್ದ ಚೋರಿ! ನಟಿ `ಭಾನುಮತಿ’ ಹಾಟ್‌ ಪೋಟೊಗಳಿಗೆ ಫ್ಯಾನ್ಸ್ ಫುಲ್ ಫಿದಾ

Kannada Serials
ಕಿರುತೆರೆ8 months ago

Kannada Serials TRP: 2ನೇ ಸ್ಥಾನದಲ್ಲಿ 2 ಧಾರಾವಾಹಿಗಳು; ಟಿಆರ್‌ಪಿ ರೇಸ್‌ನಲ್ಲಿಲ್ಲ ಭಾಗ್ಯಲಕ್ಷ್ಮೀ!

Bigg Boss- Saregamapa 20 average TRP
ಕಿರುತೆರೆ8 months ago

Kannada Serials TRP: ಏಳನೇ ಸ್ಥಾನಕ್ಕೆ ʻಅಮೃತಧಾರೆʼ ಕುಸಿತ; ಬಿಗ್‌ ಬಾಸ್‌-ಸರಿಗಮಪ ಟಿಆರ್‌ಪಿ ಎಷ್ಟು?

galipata neetu
ಕಿರುತೆರೆ6 months ago

Kanyadana Serial: ಕಿರುತೆರೆಗೆ ಮತ್ತೆ ಎಂಟ್ರಿ ಕೊಟ್ಟ ʻಗಾಳಿಪಟʼ ಖ್ಯಾತಿಯ ʻನೀತುʼ!

Kannada Serials
ಕಿರುತೆರೆ8 months ago

Kannada Serials TRP: ನಾಲ್ಕನೇ ಸ್ಥಾನಕ್ಕೆ ಕುಸಿತ ಕಂಡ ʻಸೀತಾ ರಾಮʼ; ಟಿಆರ್‌ಪಿ ರೇಸ್‌ಗೆ ʻಭಾಗ್ಯಲಕ್ಷ್ಮಿʼ ಬ್ಯಾಕ್‌!

Kannada Serials
ಕಿರುತೆರೆ8 months ago

Kannada Serials TRP: ಟಿಆರ್‌ಪಿಯಲ್ಲಿ ʻಭಾಗ್ಯಲಕ್ಷ್ಮೀʼ ಹವಾ; ʻಪುಟ್ಟಕ್ಕನ ಮಕ್ಕಳುʼ ಧಾರಾವಾಹಿಗೆ ಸಂಕಷ್ಟ!

Bigg Boss' dominates TRP; Sita Rama fell to the sixth position
ಕಿರುತೆರೆ7 months ago

Kannada Serials TRP: ಟಿಆರ್‌ಪಿಯಲ್ಲಿ ʻಬಿಗ್ ಬಾಸ್ʼದೇ ಮೇಲುಗೈ; 6ನೇ ಸ್ಥಾನಕ್ಕೆ ಕುಸಿದ ʻಸೀತಾ ರಾಮʼ

geetha serial Dhanush gowda engagement
ಕಿರುತೆರೆ6 months ago

Dhanush Gowda: ಗೀತಾ ಧಾರಾವಾಹಿ ನಟನ ನಿಶ್ಚಿತಾರ್ಥ; ಭವ್ಯಾಳ ಕಮೆಂಟ್‌ ಬಾಕ್ಸ್‌ ಆಫ್‌!

varun
ಕಿರುತೆರೆ7 months ago

Brindavana Serial: ʼಬೃಂದಾವನʼ ಧಾರಾವಾಹಿಯಲ್ಲಿ ದೊಡ್ಡ ಟ್ವಿಸ್ಟ್‌; ಪ್ರಮುಖ ಪಾತ್ರಧಾರಿಯೇ ಬದಲು

Kannada Serials
ಕಿರುತೆರೆ9 months ago

Kannada Serials TRP: ಟಿಆರ್‌ಪಿಯಲ್ಲಿ ಏರಿಕೆ ಕಂಡ ʻಅಮೃತಧಾರೆʼ; ʻಗಟ್ಟಿಮೇಳʼಕ್ಕೆ ನಾಲ್ಕನೇ ಸ್ಥಾನ!

Lok Sabha Election Result 2024 Live
ದೇಶ3 hours ago

Lok Sabha Election Result 2024 Live: ಲೋಕಸಭೆ ಚುನಾವಣೆ ಫಲಿತಾಂಶದ ಲೈವ್‌ ಇಲ್ಲಿ ವೀಕ್ಷಿಸಿ

Karnataka Rain
ಮಳೆ18 hours ago

Karnataka Rain : 133 ವರ್ಷದ ರೆಕಾರ್ಡ್ ಬ್ರೇಕ್ ಮಾಡಿದ ʻಬೆಂಗಳೂರು ಮಳೆʼ

Snake Rescue Snakes spotted in heavy rain
ಮಳೆ19 hours ago

Snake Rescue: ಮಳೆ ನೀರಿನಲ್ಲಿ ಹರಿದು ಬಂದು ಬೈಕ್‌ನಲ್ಲಿ ಸೇರಿಕೊಂಡ ಹಾವು; ಮನೆಗಳಲ್ಲೂ ಪ್ರತ್ಯಕ್ಷ

Karnataka Rain
ಮಳೆ2 days ago

Karnataka Rain : ವೀಕೆಂಡ್‌ ಮೋಜಿಗೆ ವರುಣ ಅಡ್ಡಿ; ಭಾನುವಾರ ಸಂಜೆಗೆ ಮಳೆ ಕಾಟ

Liquor ban
ಬೆಂಗಳೂರು3 days ago

Liquor Ban : ಮುಂದಿನ ಏಳು ದಿನಗಳಲ್ಲಿ ನಾಲ್ಕೂವರೆ ದಿನ ಬಾರ್ ಕ್ಲೋಸ್; ಎಣ್ಣೆ ಸಿಗೋದು ಯಾವ ದಿನ?

Assault Case in Shivamogga
ಕ್ರೈಂ5 days ago

Assault Case : ಶಿವಮೊಗ್ಗದಲ್ಲಿ ಮತ್ತೆ ಬಾಲ ಬಿಚ್ಚಿದ ಪುಂಡರು; ಗಾಂಜಾ ನಶೆಯಲ್ಲಿ ವಾಹನಗಳು ಪೀಸ್‌ ಪೀಸ್‌

Karnataka weather Forecast
ಮಳೆ7 days ago

Karnataka Weather : ಚಿಕ್ಕಮಗಳೂರಲ್ಲಿ ಭಾರಿ ಮಳೆ; ಯಾದಗಿರಿಯಲ್ಲಿ ಕರೆಂಟ್‌ ಕಟ್‌, ಜನರೇಟರ್‌ನಿಂದ ಮೊಬೈಲ್‌ಗಳಿಗೆ ಚಾರ್ಜಿಂಗ್‌!

tumkur murder
ತುಮಕೂರು7 days ago

Tumkur Murder : ಮಗುವಿನ ಮುಂದೆಯೇ ಹೆಂಡತಿಯ ಕತ್ತು, ದೇಹವನ್ನು ಕತ್ತರಿಸಿ ಬಿಸಾಡಿದ ದುಷ್ಟ

Karnataka Weather Forecast
ಮಳೆ1 week ago

Karnataka Weather : ಕಡಲತೀರದಲ್ಲಿ ಅಲೆಗಳ ಅಬ್ಬರ, ಪ್ರವಾಸಿಗರಿಗೆ ಕಟ್ಟೆಚ್ಚರ; ನಾಳೆಯೂ ಗಾಳಿ ಸಹಿತ ಮಳೆ ಅಬ್ಬರ

Karnataka Rain
ಮಳೆ1 week ago

Karnataka Rain : ಯಾದಗಿರಿಯಲ್ಲಿ ಬಿರುಗಾಳಿ ಸಹಿತ ಮಳೆ; ಸಿಡಿಲು ಬಡಿದು ಎಮ್ಮೆಗಳು ಸಾವು

ಟ್ರೆಂಡಿಂಗ್‌