Narendra Modi: ಕರ್ನಾಟಕದ 2 ಸೇರಿ 15 ಏರ್‌ಪೋರ್ಟ್‌ ಯೋಜನೆಗಳಿಗೆ ಮೋದಿ ಚಾಲನೆ - Vistara News

ದೇಶ

Narendra Modi: ಕರ್ನಾಟಕದ 2 ಸೇರಿ 15 ಏರ್‌ಪೋರ್ಟ್‌ ಯೋಜನೆಗಳಿಗೆ ಮೋದಿ ಚಾಲನೆ

Narendra Modi: ಕರ್ನಾಟಕದ ಎರಡು ವಿಮಾನ ನಿಲ್ದಾಣಗಳಲ್ಲಿ ಟರ್ಮಿನಲ್‌ಗಳ ನಿರ್ಮಾಣ ಸೇರಿ ದೇಶದ ಹಲವೆಡೆ 15 ವಿಮಾನ ನಿಲ್ದಾಣದ ಯೋಜನೆಗಳಿಗೆ ನರೇಂದ್ರ ಮೋದಿ ಅವರು ಭಾನುವಾರ ಚಾಲನೆ ನೀಡಿದರು.

VISTARANEWS.COM


on

Narendra Modi
ಮಹತ್ವದ, ಕುತೂಹಲಕರ ಸುದ್ದಿಗಾಗಿ ಫಾಲೊ ಮಾಡಿ
Koo

ಲಖನೌ: ಕರ್ನಾಟಕದ ಹುಬ್ಬಳ್ಳಿ ವಿಮಾನ ನಿಲ್ದಾಣ (Hubli Airport) ಹಾಗೂ ಬೆಳಗಾವಿಯ ಸಾಂಬ್ರಾ ವಿಮಾನ ನಿಲ್ದಾಣದಲ್ಲಿ (Belgaum Airport) ಹೊಸ ಟರ್ಮಿನಲ್‌ಗಳ ನಿರ್ಮಾಣಕ್ಕೆ ಶಂಕುಸ್ಥಾಪನೆ ಸೇರಿ ದೇಶಾದ್ಯಂತ 15 ಏರ್‌ಪೋರ್ಟ್‌ ಯೋಜನೆಗಳಿಗೆ ಪ್ರಧಾನಿ ನರೇಂದ್ರ ಮೋದಿ (Narendra Modi) ಅವರು ಭಾನುವಾರ (ಮಾರ್ಚ್‌ 10) ಚಾಲನೆ ನೀಡಿದರು. ಉತ್ತರ ಪ್ರದೇಶದ ಆಜಂಗಢದಲ್ಲಿ ನಡೆದ ಸಾರ್ವಜನಿಕ ಸಮಾವೇಶದಲ್ಲಿ ನರೇಂದ್ರ ಮೋದಿ ಅವರು ವರ್ಚ್ಯುವಲ್‌ ವೇದಿಕೆ ಮೂಲಕ ಏರ್‌ಪೋರ್ಟ್‌ ಯೋಜನೆಗಳಿಗೆ (Airport Projects) ಚಾಲನೆ ನೀಡಿದರು.

ಸುಮಾರು 9,800 ಕೋಟಿ ರೂಪಾಯಿ ವೆಚ್ಚದ ಯೋಜನೆಗಳಿಗೆ ಮೋದಿ ಚಾಲನೆ ನೀಡಿದರು. ಪುಣೆ, ಕೊಲ್ಹಾಪುರ, ಗ್ವಾಲಿಯರ್‌, ಜಬಲ್ಪುರ, ದೆಹಲಿ, ಲಖನೌ, ಅಲಿಗಢ, ಆಜಂಗಢ, ಚಿತ್ರಕೂಟ, ಮೊರಾದಾಬಾದ್‌, ಶ್ರವಸ್ತಿ ಹಾಗೂ ಆದಂಪುರ ವಿಮಾನ ನಿಲ್ದಾಣಗಳಲ್ಲಿ ನಿರ್ಮಿಸಲಾಗಿರುವ ಪ್ಯಾಸೆಂಜರ್‌ ಟರ್ಮಿನಲ್‌ಗಳನ್ನು ಮೋದಿ ಲೋಕಾರ್ಪಣೆ ಮಾಡಿದರು. ಹಾಗೆಯೇ, ಕರ್ನಾಟಕದ ಹುಬ್ಬಳ್ಳಿ, ಬೆಳಗಾವಿ ಹಾಗೂ ಆಂಧ್ರಪ್ರದೇಶದ ಕಡಪ ವಿಮಾನ ನಿಲ್ದಾಣಗಳಲ್ಲಿ ಹೊಸ ಟರ್ಮಿನಲ್‌ಗಳ ನಿರ್ಮಾಣಕ್ಕೆ ಶಿಲಾನ್ಯಾಸ ನೆರವೇರಿಸಿದರು.

ಬೆಂಗಳೂರಿನ ಸಾಂಬ್ರಾ ವಿಮಾನ ನಿಲ್ದಾಣದಲ್ಲಿ ಸುಮಾರು 352 ಕೋಟಿ ರೂ. ವೆಚ್ಚದಲ್ಲಿ ಹೊಸ ಟರ್ಮಿನಲ್‌ ನಿರ್ಮಿಸಲಾಗುತ್ತದೆ. ಇನ್ನು ಹುಬ್ಬಳ್ಳಿಯ ವಿಮಾನ ನಿಲ್ದಾಣದಲ್ಲೂ 350 ಕೋಟಿ ರೂ. ವೆಚ್ಚದಲ್ಲಿ ಟರ್ಮಿನಲ್‌ ನಿರ್ಮಿಸಲಾಗುತ್ತದೆ. ಬೆಳಗಾವಿ ವಿಮಾನ ನಿಲ್ದಾಣದ ಟರ್ಮಿನಲ್‌ ಶಂಕುಸ್ಥಾಪನೆ ಕಾರ್ಯಕ್ರಮದಲ್ಲಿ ಸಂಸದೆ ಮಂಗಳಾ ಅಂಗಡಿ, ರಾಜ್ಯಸಭಾ ಸದಸ್ಯ ಈರಣ್ಣ ಕಡಾಡಿ, ದೆಹಲಿ ವಿಶೇಷ ಪ್ರತಿನಿಧಿ ಪ್ರಕಾಶ ಹುಕ್ಕೇರಿ, ಹುಬ್ಬಳ್ಳಿಯ ಕಾರ್ಯಕ್ರಮದಲ್ಲಿ ಕೇಂದ್ರ ಸಂಸದೀಯ ಸಚಿವ ಪ್ರಲ್ಹಾದ್‌ ಜೋಶಿ ಉಪಸ್ಥಿತರಿದ್ದರು.

ಇದನ್ನೂ ಓದಿ: Narendra Modi: ತ್ರಿಶೂಲ ಹಿಡಿದು ಶಿವನ ಅವತಾರ ತಾಳಿದ ಮೋದಿ; ವಿಡಿಯೊ ವೈರಲ್

ವಿಕಸಿತ ಭಾರತಕ್ಕೆ ಮುನ್ನುಡಿ ಎಂದ ಮೋದಿ

ವಿಮಾನ ನಿಲ್ದಾಣದ ಯೋಜನೆಗಳಿಗೆ ಚಾಲನೆ ನೀಡಿದ ಬಳಿಕ ಮಾತನಾಡಿದ ನರೇಂದ್ರ ಮೋದಿ, “ದೇಶದ ವಿಮಾನ ನಿಲ್ದಾಣ ಯೋಜನೆಗಳಿಗೆ ಚಾಲನೆ ನೀಡಿರುವುದು 2047ರ ವಿಕಸಿತ ಭಾರತ ನಿರ್ಮಾಣದ ಸಂಕಲ್ಪಕ್ಕೆ ಮುನ್ನುಡಿಯಾಗಿದೆ” ಎಂದು ಹೇಳಿದರು. “ದೇಶದಲ್ಲಿ ಸಬ್‌ ಕಾ ಸಾಥ್‌, ಸಬ್‌ ಕಾ ವಿಕಾಸ್‌ ಎಂಬ ತತ್ವದಲ್ಲಿ ಯೋಜನೆಗಳನ್ನು ಜಾರಿಗೆ ತರಲಾಗುತ್ತಿದೆ. ಸಣ್ಣ ನಗರಗಳಲ್ಲೂ ಇಂದು ವಿಮಾನ ನಿಲ್ದಾಣಗಳು ರಾರಾಜಿಸುತ್ತಿವೆ. ರೈಲ್ವೆ ಸಂಪರ್ಕವೂ ಉತ್ತಮವಾಗಿದೆ. ದಾಖಲೆ ಪ್ರಮಾಣದಲ್ಲಿ ರಸ್ತೆ ನಿರ್ಮಿಸಲಾಗಿದೆ. ಇದೆಲ್ಲ ಮೋದಿಯ ಗ್ಯಾರಂಟಿಯಾಗಿದೆ” ಎಂದು ತಿಳಿಸಿದರು.

ಈ ಸಂಗತಿಯ ಕುರಿತು ನಿಮ್ಮ ಅನಿಸಿಕೆ ಏನು? ಕಾಮೆಂಟ್ ಮೂಲಕ ತಿಳಿಸಿ

ಕ್ಷಣ ಕ್ಷಣದ ಮಾಹಿತಿಗಾಗಿ Vistara News FaceBook ಪೇಜ್ ಫಾಲೋ ಮಾಡಿ
ಮಹತ್ವದ ಮಾಹಿತಿಗಾಗಿ ವಿಸ್ತಾರ ನ್ಯೂಸ್ ಆ್ಯಪ್ ಉಚಿತವಾಗಿ ಡೌನ್ ಲೋಡ್ ಮಾಡಿಕೊಳ್ಳಿ: Andriod App | IOS App
Continue Reading
Click to comment

Leave a Reply

Your email address will not be published. Required fields are marked *

ದೇಶ

Mahua Moitra: ಹೊಸ ಕಾನೂನಿನಂತೆ ಟಿಎಂಸಿ ಎಂಪಿ ಮಹುವಾ ಮೊಯಿತ್ರಾ ವಿರುದ್ಧ ಎಫ್‌ಐಆರ್;‌ ಕಾರಣ ಇಲ್ಲಿದೆ

Mahua Moitra: ಮಹುವಾ ಮೊಯಿತ್ರಾ ಅವರ ಪೋಸ್ಟ್‌ ವೈರಲ್‌ ಆಗುತ್ತಲೇ ರಾಷ್ಟ್ರೀಯ ಮಹಿಳಾ ಆಯೋಗವು ಆಕ್ರೋಶ ವ್ಯಕ್ತಪಡಿಸಿತ್ತು. ಅಲ್ಲದೆ, ಟಿಎಂಸಿ ಸಂಸದೆ ವಿರುದ್ಧ ಎಫ್‌ಐಆರ್‌ ದಾಖಲಿಸಬೇಕು, ಕಠಿಣ ಕ್ರಮ ತೆಗೆದುಕೊಳ್ಳಬೇಕು ಎಂಬುದಾಗಿ ದೆಹಲಿ ಪೊಲೀಸರಿಗೆ ಸೂಚಿಸಲಾಗಿತ್ತು.

VISTARANEWS.COM


on

Mahua Moitra
Koo

ನವದೆಹಲಿ: ರಾಷ್ಟ್ರೀಯ ಮಹಿಳಾ ಆಯೋಗದ (NCW Chief) ಅಧ್ಯಕ್ಷೆ ರೇಖಾ ಶರ್ಮಾ ಅವರ ಕುರಿತು ಅವಹೇಳನಕಾರಿಯಾಗಿ ಹೇಳಿಕೆ ನೀಡಿದ ಆರೋಪದಲ್ಲಿ ಟಿಎಂಸಿ ಸಂಸದೆ ಮಹುವಾ ಮೊಯಿತ್ರಾ (Mahua Moitra) ಅವರ ವಿರುದ್ಧ ಎಫ್‌ಐಆರ್‌ ದಾಖಲಾಗಿದೆ. ಜುಲೈ 1ರಂದು ಜಾರಿಗೆ ಬಂದ ಹೊಸ ಕಾನೂನುಗಳ ಪೈಕಿ ಒಂದಾದ ಭಾರತೀಯ ನ್ಯಾಯ ಸಂಹಿತೆ (BNS) ಅನ್ವಯ ಮಹುವಾ ಮೊಯಿತ್ರಾ ಅವರ ವಿರುದ್ಧ ದೆಹಲಿ ಪೊಲೀಸರು ಎಫ್‌ಐಆರ್‌ ದಾಖಲಿಸಿಕೊಂಡಿದ್ದಾರೆ.

ಮಹುವಾ ಮೊಯಿತ್ರಾ ಹೇಳಿದ್ದೇನು?

ಉತ್ತರ ಪ್ರದೇಶದ ಹತ್ರಾಸ್‌ನಲ್ಲಿ ಕಾಲ್ತುಳಿತದಿಂದ 121 ಮಂದಿ ಮೃತಪಟ್ಟ ಹಿನ್ನೆಲೆಯಲ್ಲಿ ರೇಖಾ ಶರ್ಮಾ ಅವರು ಹತ್ರಾಸ್‌ಗೆ ಭೇಟಿ ನೀಡಿದ ವಿಡಿಯೊವನ್ನು ಮಹುವಾ ಮೊಯಿತ್ರಾ ಅವರು ಎಕ್ಸ್‌ ಸಾಮಾಜಿಕ ಜಾಲತಾಣದಲ್ಲಿ ಹಂಚಿಕೊಂಡಿದ್ದರು. ಅಲ್ಲದೆ, “ತಮ್ಮ ಬಾಸ್‌ನ ಪೈಜಾಮಾ ಹಿಡಿದುಕೊಳ್ಳುವುದರಲ್ಲಿಯೇ ಇವರು ನಿರತರಾಗಿದ್ದಾರೆ” ಎಂಬುದಾಗಿ ಟಿಎಂಸಿ ಸಂಸದೆ ಬರೆದುಕೊಂಡಿದ್ದರು.

ಮಹುವಾ ಮೊಯಿತ್ರಾ ಅವರ ಪೋಸ್ಟ್‌ ವೈರಲ್‌ ಆಗುತ್ತಲೇ ರಾಷ್ಟ್ರೀಯ ಮಹಿಳಾ ಆಯೋಗವು ಆಕ್ರೋಶ ವ್ಯಕ್ತಪಡಿಸಿತ್ತು. ಅಲ್ಲದೆ, ಟಿಎಂಸಿ ಸಂಸದೆ ವಿರುದ್ಧ ಎಫ್‌ಐಆರ್‌ ದಾಖಲಿಸಬೇಕು, ಕಠಿಣ ಕ್ರಮ ತೆಗೆದುಕೊಳ್ಳಬೇಕು ಎಂಬುದಾಗಿ ದೆಹಲಿ ಪೊಲೀಸರಿಗೆ ಸೂಚಿಸಲಾಗಿತ್ತು. ಅಲ್ಲದೆ, ಲೋಕಸಭೆ ಸ್ಪೀಕರ್‌ ಓಂ ಬಿರ್ಲಾ ಅವರಿಗೂ ರಾಷ್ಟ್ರೀಯ ಮಹಿಳಾ ಆಯೋಗವು ಪತ್ರ ಬರೆದು, ಮಹುವಾ ಮೊಯಿತ್ರಾ ವಿರುದ್ಧ ಕಠಿಣ ಕ್ರಮ ತೆಗೆದುಕೊಳ್ಳಬೇಕು ಎಂಬುದಾಗಿ ಮನವಿ ಮಾಡಿತ್ತು. ಈಗ ಸಂಸದೆ ವಿರುದ್ಧ ಎಫ್‌ಐಆರ್‌ ದಾಖಲಿಸಲಾಗಿದೆ.

ವಿವಾದಗಳಿಗೂ ಮಹುವಾ ಮೊಯಿತ್ರಾ ಅವರಿಗೂ ಎಲ್ಲಿಲ್ಲದ ನಂಟಿದೆ. ಪ್ರಧಾನಿ ನರೇಂದ್ರ ಮೋದಿ ಮತ್ತು ಅದಾನಿ ಗ್ರೂಪ್ ಗುರಿಯಾಗಿಸಿಕೊಂಡು ಪ್ರಶ್ನೆ ಕೇಳಲು ಟಿಎಂಸಿ ಸಂಸದೆ ಮಹುವಾ ಮೊಯಿತ್ರಾ ಅವರು ಉದ್ಯಮಿ ದರ್ಶನ್ ಹಿರಾನಂದನಿ ಅವರಿಂದ ಲಂಚ ಸ್ವೀಕರಿಸಿದ್ದಾರೆ ಎಂದು ಬಿಜೆಪಿಯ ನಿಶಿಕಾಂತ್‌ ದುಬೆ ಆರೋಪ ಮಾಡಿದ್ದು ದೇಶಾದ್ಯಂತ ಸುದ್ದಿಯಾಗಿತ್ತು. ಇದರ ಕುರಿತು ತನಿಖೆ ಕೂಡ ನಡೆಸಲಾಗಿತ್ತು. “ಉದ್ಯಮಿ ದರ್ಶನ್‌ ಹಿರಾನಂದನಿ ಅವರಿಗೆ ಸಂಸತ್‌ ಐಡಿ ಹಾಗೂ ಪಾಸ್‌ವರ್ಡ್‌ ಕೊಟ್ಟಿದ್ದು ನಿಜ. ಆದರೆ, ಹಣ ಪಡೆದು ಪ್ರಶ್ನೆ ಕೇಳುವ ದಿಸೆಯಲ್ಲಿ ಐಡಿ, ಪಾಸ್‌ವರ್ಡ್‌ ಕೊಟ್ಟಿಲ್ಲ” ಎಂಬುದಾಗಿ ಮಹುವಾ ಮೊಯಿತ್ರಾ ಅವರು ಸುದ್ದಿವಾಹಿನಿಯೊಂದಕ್ಕೆ ತಿಳಿಸಿದ್ದರು.

ಇದನ್ನೂ ಓದಿ: Mahua Moitra: ಸುಮ್ನೆ ಕೂತ್ಕೊಳ್ಳಿ ರಾಹುಲ್‌ ಗಾಂಧಿ; ಸಂಸತ್ತಲ್ಲೇ ಮಹುವಾ ಮೊಯಿತ್ರಾ ಹೀಗೆ ಸಿಟ್ಟಾಗಿದ್ದೇಕೆ?

Continue Reading

ಬಜೆಟ್ 2024

Union Budget 2024: ಘೋಷಣೆ ಸೋರಿಕೆಯಿಂದ ಹಲ್ವಾ ತಿನ್ನುವವರೆಗೆ; ಕೇಂದ್ರ ಬಜೆಟ್‌ನ 10 ಆಸಕ್ತಿದಾಯಕ ಸಂಗತಿಗಳಿವು

ಕೇಂದ್ರ ಹಣಕಾಸು ಸಚಿವೆ ನಿರ್ಮಲಾ ಸೀತಾರಾಮನ್‌ ಅವರು ಜುಲೈ 15ರಿಂದ 22ರ ಅವಧಿಯ ನಡುವೆ ಬಜೆಟ್‌ (Union Budget 2024) ಮಂಡಿಸಲು ಸಿದ್ಧತೆ ನಡೆಸಿದ್ದು, ಈ ಸಂದರ್ಭದಲ್ಲಿ ಭಾರತದ ಕೇಂದ್ರ ಬಜೆಟ್ ಬಗ್ಗೆ ತಿಳಿದುಕೊಳ್ಳಬೇಕಾದ ಹತ್ತು ಪ್ರಮುಖ ಆಸಕ್ತಿದಾಯಕ ಸಂಗತಿಗಳಿವೆ. ಅವುಗಳ ಕುರಿತು ಮಾಹಿತಿ ಇಲ್ಲಿದೆ.

VISTARANEWS.COM


on

By

Union Budget 2024
Koo

ಲೋಕಸಭೆ ಚುನಾವಣೆ (lok sabha election) ಬಳಿಕ ಮೊದಲ ಬಾರಿಗೆ ಬಿಜೆಪಿ (BJP) ನೇತೃತ್ವದ ಎನ್‌ಡಿಎ (NDA) ಮೈತ್ರಿಕೂಟವು ಪ್ರಧಾನಿ ನರೇಂದ್ರ ಮೋದಿ (PM Narendra Modi) ಅವರ ನೇತೃತ್ವದಲ್ಲಿ ಮೊದಲ ಬಜೆಟ್ (Union Budget 2024) ಮಂಡಿಸಲಿದೆ. ಜುಲೈ 15ರಿಂದ 22ರ ಅವಧಿಯಲ್ಲಿ ಕೇಂದ್ರ ಹಣಕಾಸು ಸಚಿವೆ ನಿರ್ಮಲಾ ಸೀತಾರಾಮನ್‌ (Nirmala Sitharaman) ಅವರು ಬಜೆಟ್‌ ಮಂಡಿಸಲು ಸಿದ್ಧತೆ ನಡೆಸಿದ್ದಾರೆ. ಕೇಂದ್ರ ಬಜೆಟ್ ಮಂಡನೆಯಾಗಲಿರುವ ಈ ಸಂದರ್ಭದಲ್ಲಿ ತಿಳಿದುಕೊಳ್ಳಬೇಕಾದ 10 ಆಸಕ್ತಿದಾಯಕ ಸಂಗತಿಗಳಿವೆ.

ಬಜೆಟ್ ಎಂಬ ಪದವು ಫ್ರೆಂಚ್ ಪದ ‘ಬೌಗೆಟ್’ನಿಂದ ಬಂದಿದೆ. ಇದರ ಅರ್ಥ ಸಣ್ಣ ಚೀಲ ಅಥವಾ ಚೀಲ ಎಂಬುದಾಗಿದೆ. ಸ್ವತಂತ್ರ ಪೂರ್ವ ಭಾರತದಲ್ಲಿ ಮೊಟ್ಟಮೊದಲ ಬಾರಿಗೆ ಬಜೆಟ್ ಮಂಡಿಸಿದ್ದು ಜೇಮ್ಸ್ ವಿಲ್ಸನ್. ಭಾರತೀಯ ಕೌನ್ಸಿಲ್‌ನ ಹಣಕಾಸು ಸಚಿವರಾಗಿ ನೇಮಕಗೊಂಡ ಅವರು ಭಾರತೀಯ ವೈಸ್‌ರಾಯ್‌ಗೆ ಬಜೆಟ್ ಕುರಿತು ಸಲಹೆ ನೀಡಿದರು.

1860ರಲ್ಲಿ ಭಾರತದ ಮೊದಲ ಬಜೆಟ್ ಮಂಡನೆಯಾಗಿತ್ತು. ಸ್ಕಾಟಿಷ್ ಉದ್ಯಮಿಯಾಗಿದ್ದ ಜೇಮ್ಸ್ ವಿಲ್ಸನ್ ವ್ಯಾಪಾರ ಮತ್ತು ಹಣಕಾಸಿನ ಬಗ್ಗೆ ಅಪಾರ ತಿಳಿವಳಿಕೆ ಹೊಂದಿದ್ದರು. ಪ್ರಸಿದ್ಧ ಪತ್ರಿಕೆಯಾದ ದಿ ಎಕನಾಮಿಸ್ಟ್ ಮತ್ತು ಸ್ಟ್ಯಾಂಡರ್ಡ್ ಚಾರ್ಟರ್ಡ್ ಬ್ಯಾಂಕ್‌ನ ಸಂಸ್ಥಾಪಕರಾಗಿದ್ದ ಅವರು ಬ್ರಿಟಿಷ್ ಸಂಸತ್ತಿನ ಸದಸ್ಯರಾಗಿದ್ದರು ಮತ್ತು ಯುಕೆ ಖಜಾನೆಯ ಹಣಕಾಸು ಕಾರ್ಯದರ್ಶಿ ಮತ್ತು ವಾಣಿಜ್ಯ ಮಂಡಳಿಯ ಉಪಾಧ್ಯಕ್ಷರಾಗಿದ್ದರು.


ಕೇಂದ್ರ ಬಜೆಟ್‌ನ 10 ಪ್ರಮುಖ ಸಂಗತಿಗಳು

1. ಮೊದಲ ಬಜೆಟ್‌ ಮಂಡಿಸಿದ್ದು ಯಾರು?

ಸ್ವತಂತ್ರ ಭಾರತದ ಮೊದಲ ವಾರ್ಷಿಕ ಬಜೆಟ್ ಅನ್ನು ಆರ್.ಕೆ. ಷಣ್ಮುಖಂ ಚೆಟ್ಟಿಯವರು 1948ರ ಫೆಬ್ರವರಿ 28ರಂದು ಮಂಡಿಸಿದರು. ದೇಶ ಸ್ವತಂತ್ರಗೊಂಡ ಮೂರು ತಿಂಗಳ ಅನಂತರ ದೇಶದ ಆರ್ಥಿಕ ಸ್ಥಿತಿಯನ್ನು ಪರಿಗಣಿಸಿ 1947ರ ನವೆಂಬರ್ 26ರಂದು ಮಧ್ಯಂತರ ಬಜೆಟ್ ಮಂಡಿಸಲಾಯಿತು. ಇದು ಕೇವಲ ನಾಲ್ಕು ತಿಂಗಳವರೆಗೆ ಊರ್ಜಿತವಾಗಿತ್ತು.
ಪ್ರಧಾನಿಯೊಬ್ಬರು ಇದುವರೆಗೆ ಮೂರು ಬಾರಿ ಕೇಂದ್ರ ಬಜೆಟ್ ಮಂಡಿಸಿದ್ದಾರೆ. ಪಂಡಿತ್ ಜವಾಹರಲಾಲ್ ನೆಹರು ಅವರು 1958ರಲ್ಲಿ, ಪ್ರಧಾನಿ ಇಂದಿರಾ ಗಾಂಧಿ ಅವರು 1970ರಲ್ಲಿ ಬಜೆಟ್ ಮಂಡಿಸಿದರು. ಅನಂತರ ರಾಜೀವ್ ಗಾಂಧಿ ಅವರು 1987ರಲ್ಲಿ ಬಜೆಟ್ ಮಂಡಿಸಿದ್ದಾರೆ.

2. ಅತಿ ಉದ್ದದ ಬಜೆಟ್ ಭಾಷಣ ಯಾರದ್ದು?

ವಿತ್ತ ಸಚಿವೆ ನಿರ್ಮಲಾ ಸೀತಾರಾಮನ್ ಅವರು 2020ರಲ್ಲಿ ಅತಿ ಉದ್ದದ ಬಜೆಟ್ ಭಾಷಣ ಮಾಡಿದ ದಾಖಲೆಯನ್ನು ಹೊಂದಿದ್ದಾರೆ. ಇದು 2 ಗಂಟೆ 42 ನಿಮಿಷಗಳು. ಅವರು ಭಾರತದ ಮೊದಲ ಪೂರ್ಣ ಸಮಯದ ಮಹಿಳಾ ಹಣಕಾಸು ಮಂತ್ರಿಯೂ ಆಗಿದ್ದಾರೆ.


3. ಕಾಗದ ರಹಿತ ಬಜೆಟ್‌

ಭಾರತದ ಇತಿಹಾಸದಲ್ಲಿ ಮೊದಲ ಬಾರಿಗೆ 2021ರಲ್ಲಿ ಬಜೆಟ್ ಕಾಗದರಹಿತವಾಯಿತು.

4. ಗರಿಷ್ಠ ಬಜೆಟ್‌ ಯಾರದ್ದು?

ಗರಿಷ್ಠ ಸಂಖ್ಯೆಯ ಬಜೆಟ್‌ಗಳನ್ನು ಮಂಡಿಸಿದ ಕೀರ್ತಿ ಮಾಜಿ ವಿತ್ತ ಸಚಿವ ಮೊರಾಜಿ ದೇಸಾಯಿ ಅವರಿಗೆ ಸಲ್ಲುತ್ತದೆ. ಅವರು ಒಟ್ಟು 10 ಬಾರಿ ಬಜೆಟ್ ಮಂಡನೆ ಮಾಡಿದ್ದಾರೆ. ಅನಂತರ ಪಿ. ಚಿದಂಬರಂ ಅವರು 9 ಬಾರಿ, ಪ್ರಣಬ್ ಮುಖರ್ಜಿ ಮತ್ತು ಯಶವಂತ್ ಸಿನ್ಹಾ ಅವರು ತಲಾ 8 ಬಾರಿ ಮತ್ತು ಮನಮೋಹನ್ ಸಿಂಗ್ ಅವರು 6 ಬಾರಿ ಬಜೆಟ್ ಮಂಡಿಸಿದ್ದಾರೆ.

5. ಬಜೆಟ್‌ ಮಂಡನೆ ಸಮಯ ಬದಲಾವಣೆ

ಭಾರತದಲ್ಲಿ ಯಾವಾಗಲೂ ಸಂಜೆ 5 ಗಂಟೆಗೆ ಬಜೆಟ್ ಮಂಡಿಸಲಾಗುತ್ತಿತ್ತು. ಆಯವ್ಯಯ ಪತ್ರಗಳನ್ನು ಬ್ರಿಟಿಷ್ ಪಾರ್ಲಿಮೆಂಟ್‌ನಲ್ಲಿ ಮತ್ತು ಲಂಡನ್‌ನಲ್ಲಿ ಮಂಡನೆ ಮಾಡುವಂತೆ ಈ ಅಭ್ಯಾಸವು ಮೊದಲು ಪ್ರಾರಂಭವಾಯಿತು. 1999ರವರೆಗೂ ಇದು ಪಾಲನೆಯಾಗುತ್ತಿತ್ತು. ಆದರೆ ಹಣಕಾಸು ಸಚಿವ ಯಶವಂತ್ ಸಿನ್ಹಾ ಅವರು ಬೆಳಗ್ಗೆ 11 ಗಂಟೆಗೆ ಬಜೆಟ್ ಮಂಡಿಸಿ ಹೊಸ ದಾಖಲೆ ಬರೆದರು. ಆ ಬಳಿಕ ಈಗ ಮಧ್ಯಾಹ್ನವೇ ಬಜೆಟ್‌ ಮಂಡಿಸಲಾಗುತ್ತದೆ.

6. ಬಜೆಟ್‌ ದಿನ ಬದಲಾವಣೆ

2017ನೇ ವರ್ಷವು ಕೇಂದ್ರ ಬಜೆಟ್‌ಗೆ ಸಂಬಂಧಿಸಿದ ಎರಡು ಪ್ರಮುಖ ಬದಲಾವಣೆಗಳನ್ನು ಗುರುತಿಸಿದೆ. ವಾರ್ಷಿಕ ಬಜೆಟ್ ಮಂಡನೆ ದಿನಾಂಕವನ್ನು ಫೆಬ್ರವರಿ 28ರಿಂದ ಫೆಬ್ರವರಿ 1ಕ್ಕೆ ಬದಲಾಯಿಸಲಾಯಿತು. ಏಪ್ರಿಲ್ 1ರಿಂದ ಪ್ರಾರಂಭವಾಗುವ ಹಣಕಾಸು ವರ್ಷದ ಆರಂಭದ ಮೊದಲು ಸರ್ಕಾರದ ವಿವಿಧ ಯೋಜನೆಗಳಿಗೆ ಹಣ ಹಂಚಿಕೆಗೆ ಎಲ್ಲಾ ಸಂಸತ್ತಿನ ಅನುಮೋದನೆಗಳು ಜಾರಿಯಲ್ಲಿವೆ ಎಂದು ಖಚಿತಪಡಿಸಿಕೊಳ್ಳಲು ಇದನ್ನು ಮಾಡಲಾಗಿದೆ. ಈ ಮೊದಲು ಫೆಬ್ರವರಿ 28 ಮತ್ತು ಹೊಸ ಹಣಕಾಸು ವರ್ಷ ಪ್ರಾರಂಭವಾಗಲು ಕೇವಲ ಒಂದು ತಿಂಗಳು ಬಾಕಿಯಿರುತ್ತಿತ್ತು. ಆಗ ಕೆಲವು ಅನುಮೋದನೆಗಳಿಗೆ ತೊಂದರೆಯಾಗುತ್ತಿತ್ತು. ರೈಲ್ವೆ ಬಜೆಟ್ ಅನ್ನು ಕೇಂದ್ರ ಬಜೆಟ್‌ನಲ್ಲಿ ವಿಲೀನಗೊಳಿಸಿದ ವರ್ಷವೂ ಇದೇ ಆಗಿತ್ತು.

7. ಮೊದಲ ಬಾರಿ ವೈಯಕ್ತಿಕ ತೆರಿಗೆ ಇಳಿಕೆ

ಮಾಜಿ ಹಣಕಾಸು ಸಚಿವ ಪಿ. ಚಿದಂಬರಂ ಅವರು ಮಂಡಿಸಿದ 1997-98ರ ಬಜೆಟ್ ವೈಯಕ್ತಿಕ ಆದಾಯ ತೆರಿಗೆ ದರಗಳನ್ನು ಕಡಿಮೆ ಮಾಡಿದ ಮೊದಲ ಬಜೆಟ್ ಆಗಿದೆ. ಅಂದಿನಿಂದ ಸಣ್ಣಪುಟ್ಟ ಬದಲಾವಣೆಗಳನ್ನು ಹೊರತುಪಡಿಸಿ ಆ ದರಗಳು ಇನ್ನೂ ಬದಲಾಗದೆ ಹಾಗೇ ಉಳಿದಿವೆ.

8. ಮನಮೋಹನ್‌ ಸಿಂಗ್‌ ಐತಿಹಾಸಿಕ ಬಜೆಟ್‌

ಮನಮೋಹನ್ ಸಿಂಗ್ ಅವರ 1991ರ ಬಜೆಟ್ ಸ್ವತಂತ್ರ ಭಾರತದ ಇತಿಹಾಸದಲ್ಲಿ ಅತ್ಯಂತ ಐತಿಹಾಸಿಕ ಬಜೆಟ್ ಆಗಿದೆ. ಇದು ಭಾರತೀಯ ಆರ್ಥಿಕತೆಯನ್ನು ಉದಾರೀಕರಣಗೊಳಿಸಿತು. ಇದು ಭಾರತವನ್ನು ಉನ್ನತ ಬೆಳವಣಿಗೆಯ ಹಾದಿಯಲ್ಲಿ ಕೊಂಡೊಯ್ಯಲು ಪ್ರೇರಣೆಯಾಯಿತು ಮತ್ತು ವಿದೇಶಿ ಸ್ಪರ್ಧೆಗೆ ಭಾರತೀಯ ಕಂಪನಿಗಳನ್ನು ತೆರೆಯಲು ಅವಕಾಶ ಮಾಡಿಕೊಟ್ಟಿತು.

ಇದನ್ನೂ ಓದಿ: Union Budget 2024: ಬಜೆಟ್‌ನಲ್ಲಿ ಆದಾಯ ತೆರಿಗೆ ವಿನಾಯಿತಿ ಮಿತಿ 5 ಲಕ್ಷ ರೂ.ಗೆ ಏರಿಕೆ? ಇಲ್ಲಿದೆ ಮಹತ್ವದ ಅಪ್‌ಡೇಟ್


9. ಹಲ್ವಾ ಸಮಾರಂಭ

ಪ್ರತಿ ವರ್ಷ ಹಣಕಾಸು ಸಚಿವರು ಬಜೆಟ್ ಮಂಡಿಸುವ ಒಂದು ವಾರದ ಮೊದಲು ‘ಹಲ್ವಾ ಸಮಾರಂಭ’ ನಡೆಯುತ್ತದೆ. ಬಜೆಟ್ ಮುದ್ರಿಸಿದ ಸ್ಥಳದಲ್ಲಿ ‘ಹಲ್ವಾ’ ತಯಾರಿಸಿ ಎಲ್ಲರಿಗೂ ಬಡಿಸಲಾಗುತ್ತದೆ. ವಿತ್ತ ಸಚಿವರು ಮತ್ತು ವಿತ್ತ ಸಚಿವಾಲಯದ ಎಲ್ಲಾ ಪ್ರಮುಖ ಅಧಿಕಾರಿಗಳು ಸಮಾರಂಭದಲ್ಲಿ ಉಪಸ್ಥಿತರಿದ್ದು, ಶುಭ ಕಾರ್ಯದ ಆರಂಭವನ್ನು ಸೂಚಿಸುತ್ತಾರೆ. ಬಜೆಟ್ ಪೇಪರ್‌ಗಳ ಮುದ್ರಣಕ್ಕೆ ಹೋಗುವ ಮೊದಲು ಅಧಿಕಾರಿಗಳನ್ನು ಲಾಕ್ ಮಾಡಲಾಗುತ್ತದೆ. ಬಜೆಟ್ ಮಂಡನೆಯಾಗುವವರೆಗೆ ಬಜೆಟ್‌ನ ಮುದ್ರಣದಲ್ಲಿ ತೊಡಗಿರುವ ಎಲ್ಲ ಅಧಿಕಾರಿಗಳು ಹೊರ ಜಗತ್ತಿನೊಂದಿಗೆ ಯಾವುದೇ ಸಂವಹನವಿಲ್ಲದೆ ಹಣಕಾಸು ಸಚಿವಾಲಯದೊಳಗೆ ಬಂಧಿಯಾಗುತ್ತಾರೆ.

10. ಸೋರಿಕೆಯಾಗಿತ್ತು ಬಜೆಟ್‌ ಸಾರ

1950ರಲ್ಲಿ ಬಜೆಟ್ ಸೋರಿಕೆಯಾಯಿತು. ಅದರ ಅನಂತರ ಸರ್ಕಾರವು ಬಜೆಟ್‌ನ ಮುದ್ರಣವನ್ನು ರಾಷ್ಟ್ರಪತಿ ಭವನದಿಂದ ಮಿಂಟೋ ರಸ್ತೆಯಲ್ಲಿರುವ ಮುದ್ರಣಾಲಯಕ್ಕೆ ವರ್ಗಾಯಿಸಿತು. 1980ರಲ್ಲಿ ಇದನ್ನು ದೆಹಲಿಯ ರೈಸಿನಾ ರಸ್ತೆಯಲ್ಲಿರುವ ನಾರ್ತ್ ಬ್ಲಾಕ್‌ನಲ್ಲಿರುವ ಹಣಕಾಸು ಸಚಿವಾಲಯದ ನೆಲಮಾಳಿಗೆಯಲ್ಲಿರುವ ಸರ್ಕಾರಿ ಮುದ್ರಣಾಲಯಕ್ಕೆ ಸ್ಥಳಾಂತರಿಸಲಾಯಿತು.

Continue Reading

ದೇಶ

Yogi Adityanath: ನಿಂತ ಜಾಗದಲ್ಲೇ ಬಡ ಮಹಿಳೆಗೆ ಮನೆ ಮಂಜೂರು ಮಾಡಿದ ಯೋಗಿ ಆದಿತ್ಯನಾಥ್;‌ ಇದು ‌Instant ಮಾನವೀಯತೆ

Yogi Adityanath: ಭಾನುವಾರ (ಜುಲೈ 7) ಬೆಳಗ್ಗೆ ಯೋಗಿ ಆದಿತ್ಯನಾಥ್‌ ಅವರು ಗೋರಖ್‌ಪುರದ ಟಿಪಿ ನಗರ ಫ್ಲೈಓವರ್‌ ಹಾಗೂ ಷಟ್ಪಥ ರಸ್ತೆ ನಿರ್ಮಾಣದ ಕಾಮಗಾರಿ ಪರಿಶೀಲನೆ ನಡೆಸುವಾಗ, ಮನೆ ಇಲ್ಲದ ಕುರಿತು ಸಮಸ್ಯೆ ಹೇಳಿಕೊಂಡ ಮಂಜು ಎಂಬ ಮಹಿಳೆಗೆ ಶೀಘ್ರದಲ್ಲೇ ಸುಸಜ್ಜಿತ ಮನೆ ನಿರ್ಮಿಸಿಕೊಡಬೇಕು ಎಂಬುದಾಗಿ ಸೂಚಿಸಿದರು.

VISTARANEWS.COM


on

Yogi Adityanath
Koo

ಲಖನೌ: ಉತ್ತರ ಪ್ರದೇಶದ ಮುಖ್ಯಮಂತ್ರಿ ಯೋಗಿ ಆದಿತ್ಯನಾಥ್‌ (Yogi Adityanath) ಅವರು ರಾಜ್ಯದಲ್ಲಿ ಅಘೋಷಿತ ‘ಇನ್‌ಸ್ಟಂಟ್‌ ಜಸ್ಟಿಸ್’‌ (Instant Justice) ಎಂಬ ಪದ್ಧತಿ ಜಾರಿಗೆ ತಂದಿದ್ದಾರೆ. ಮಹಿಳೆ ಮೇಲೆ ಅತ್ಯಾಚಾರ ಎಸಗುವವರು, ಅಪರಾಧ ಕೃತ್ಯಗಳಲ್ಲಿ ತೊಡಗಿದವರ ಎನ್‌ಕೌಂಟರ್‌, ಅವರ ಮನೆ ನೆಲಸಮ ಸೇರಿ ಹಲವು ಕಠಿಣ ಕ್ರಮಗಳ ಮೂಲಕ ಉತ್ತರ ಪ್ರದೇಶದಲ್ಲಿ (Uttar Pradesh) ಕಾನೂನು ಸುವ್ಯವಸ್ಥೆ ಕಾಪಾಡುತ್ತಿದ್ದಾರೆ. ಇಷ್ಟೆಲ್ಲ ಕಠೋರ ನಿರ್ಣಯ ತೆಗೆದುಕೊಳ್ಳುವ ಯೋಗಿ ಆದಿತ್ಯನಾಥ್‌ ಅವರು ತಲೆಗೊಂದು ಸೂರು ಇಲ್ಲದ ಮಹಿಳೆಗೆ ನಿಂತ ಜಾಗದಲ್ಲಿಯೇ ಮನೆ ಮಂಜೂರು ಮಾಡುವ ಮೂಲಕ ಮಾನವೀಯತೆ ಮೆರೆದಿದ್ದಾರೆ.

ಹೌದು, ಭಾನುವಾರ (ಜುಲೈ 7) ಬೆಳಗ್ಗೆ ಯೋಗಿ ಆದಿತ್ಯನಾಥ್‌ ಅವರು ಗೋರಖ್‌ಪುರದ ಟಿಪಿ ನಗರ ಫ್ಲೈಓವರ್‌ ಹಾಗೂ ಷಟ್ಪಥ ರಸ್ತೆ ನಿರ್ಮಾಣದ ಕಾಮಗಾರಿ ಪರಿಶೀಲನೆ ನಡೆಸುವಾಗ, ಮನೆ ಇಲ್ಲದ ಕುರಿತು ಸಮಸ್ಯೆ ಹೇಳಿಕೊಂಡ ಮಂಜು ಎಂಬ ಮಹಿಳೆಗೆ ಶೀಘ್ರದಲ್ಲೇ ಸುಸಜ್ಜಿತ ಮನೆ ನಿರ್ಮಿಸಿಕೊಡಬೇಕು ಎಂಬುದಾಗಿ ಸೂಚಿಸಿದರು. ಪ್ರಧಾನಮಂತ್ರಿ ಆವಾಸ್‌ ಯೋಜನೆ ಅಡಿಯಲ್ಲಿ ಮಹಿಳೆಗೆ ಮನೆ ನಿರ್ಮಿಸಿಕೊಡಬೇಕು ಎಂಬುದಾಗಿ ಅಧಿಕಾರಿಗಳಿಗೆ ಆದೇಶ ನೀಡಿದರು.

Yogi Adityanath

ಮಂಜು ಎಂಬ ಮಹಿಳೆಯು ದಿಯೋರಿಯಾ ಬೈಪಾಸ್‌ ರಸ್ತೆಯ ಬಳಿ ಶೆಡ್‌ನಲ್ಲಿ ವಾಸಿಸುತ್ತಿದ್ದಾರೆ. ಮಗಳ ಜತೆ ಅವರು ವಾಸಿಸುತ್ತಿದ್ದು, ಸ್ವಂತದ್ದೊಂದು ಮನೆ ನಿರ್ಮಿಸಿಕೊಡಿ ಎಂಬುದಾಗಿ ಮುಖ್ಯಮಂತ್ರಿ ಬಳಿ ಅಳಲು ತೋಡಿಕೊಂಡರು. ಆಗ ಕೂಡಲೇ ಯೋಗಿ ಆದಿತ್ಯನಾಥ್‌ ಅವರು, ಮಹಿಳೆಯು ಎಲ್ಲಿ ಸ್ವಂತ ಜಾಗ ಹೊಂದಿದ್ದಾರೋ, ಅಲ್ಲಿಯೇ ಮನೆ ನಿರ್ಮಿಸಿಕೊಡಿ ಎಂಬುದಾಗಿ ಅಧಿಕಾರಿಗಳಿಗೆ ಸೂಚಿಸಿದರು.

“ಯೋಗಿ ಆದಿತ್ಯನಾಥ್‌ ಅವರನ್ನು ಭೇಟಿಯಾಗಿ, ನಮಗೊಂದು ಮನೆ ನಿರ್ಮಿಸಿಕೊಡಿ ಎಂಬುದಾಗಿ ಮನವಿ ಮಾಡಿದೆ. ನನ್ನ ಆರ್ಥಿಕ ದುಸ್ಥಿತಿಯ ಬಗ್ಗೆ ಅವರಿಗೆ ವಿವರಣೆ ನೀಡಿದೆ. ಒಂದು ಕ್ಷಣವೂ ಯೋಚಿಸದೆ ಅವರು ನಮಗೆ ಮನೆ ಮಂಜೂರು ಮಾಡಲು ಅಧಿಕಾರಿಗಳಿಗೆ ಸೂಚಿಸಿದರು. ಇದರಿಂದ ನಮಗೆ ಭಾರಿ ಖುಷಿಯಾಗಿದೆ. ಯೋಗಿ ಆದಿತ್ಯನಾಥ್‌ ಅವರಿಗೆ ಧನ್ಯವಾದಗಳು” ಎಂಬುದಾಗಿ ಮಹಿಳೆ ತಿಳಿಸಿದ್ದಾರೆ. ಇನ್ನು, ಅಭಿವೃದ್ಧಿ ಕಾರ್ಯಗಳಿಗಾಗಿ ಮಹಿಳೆಯ ಜಾಗವನ್ನು ಸ್ವಾಧೀನಪಡಿಸಿಕೊಳ್ಳಲಾಗಿದ್ದು, ಅವರಿಗೆ ಕೂಡಲೇ ಪರಿಹಾರವನ್ನೂ ಒದಗಿಸಿ ಎಂಬುದಾಗಿಯೂ ಸಿಎಂ ಸೂಚಿಸಿದರು.

ಇದನ್ನೂ ಓದಿ: Hathras Stampede: 121 ಜನರ ಸಾವಿಗೆ ಕಾರಣನಾದ ಭೋಲೆ ಬಾಬಾ ಆಸ್ತಿ ಧ್ವಂಸಕ್ಕೆ ಮುಂದಾದ ಯೋಗಿ!

Continue Reading

ಧಾರ್ಮಿಕ

Puri Jagannath Yatra: ಪ್ರತಿ ವರ್ಷ ಹೊಸ ರಥ, ಜಗನ್ನಾಥನಿಗೆ ಜ್ವರ! ಪುರಿ ರಥ ಯಾತ್ರೆ ವಿಶೇಷ ಹಲವು!

puri jagannath rath yatra 2024: ಜಗನ್ನಾಥ ಪುರಿ ರಥ ಯಾತ್ರೆ 2024 (Puri Jagannath Yatra) ಆರಂಭವಾಗಿದೆ. ಪುರಿಯ ಭಗವಾನ್ ಜಗನ್ನಾಥನ ಗೌರವಾರ್ಥವಾಗಿ ನಡೆಯುವ ಈ ಯಾತ್ರಾ ಉತ್ಸವವು ಭಾರತದ (india) ಅತಿದೊಡ್ಡ ಆಚರಣೆಗಳಲ್ಲಿ ಒಂದಾಗಿದೆ. ಇದು ಭವ್ಯವಾದ ಪ್ರದರ್ಶನ, ಸಾಂಸ್ಕೃತಿಕ ಸಂಭ್ರಮ ಮತ್ತು ಅದ್ಭುತವಾದ ಆಚರಣೆಗಳಿಗೆ ಸಾಕ್ಷಿಯಾಗುತ್ತದೆ. ಈ ಕುರಿತ ಮಾಹಿತಿ ಇಲ್ಲಿ

VISTARANEWS.COM


on

By

Puri Jagannath Yatra
Koo

ಎಂದಿನಂತೆ 2024ರ (puri jagannath rath yatra 2024) ಒಡಿಶಾದ (odisha) ಜಗನ್ನಾಥ ಪುರಿ ರಥ ಯಾತ್ರೆ (Puri Jagannath Yatra) ಆರಂಭಗೊಂಡಿದೆ. ಪುರಿಯ ಭಗವಾನ್ ಜಗನ್ನಾಥನ ಗೌರವಾರ್ಥವಾಗಿ ನಡೆಯುವ ಈ ಯಾತ್ರಾ ಉತ್ಸವವು ಭಾರತದ (india) ಅತಿದೊಡ್ಡ ಆಚರಣೆಗಳಲ್ಲಿ ಒಂದಾಗಿದೆ. ಇದು ಭವ್ಯವಾದ ಪ್ರದರ್ಶನ, ಸಾಂಸ್ಕೃತಿಕ ಸಂಭ್ರಮ ಮತ್ತು ಅದ್ಭುತವಾದ ಆಚರಣೆಗಳಿಗೆ ಸಾಕ್ಷಿಯಾಗುತ್ತದೆ.

ಈ ವರ್ಷ ಜಗನ್ನಾಥ ಪುರಿ ರಥ ಯಾತ್ರೆಯ ಭವ್ಯ ರಥದ ಬಗ್ಗೆ ತಿಳಿದುಕೊಳ್ಳಬೇಕಾದ ಏಳು ಆಸಕ್ತಿದಾಯಕ ಸಂಗತಿಗಳಿವೆ. ಅವುಗಳ ಕುರಿತು ಮಾಹಿತಿ ಇಲ್ಲಿದೆ.

1. ವಿಭಿನ್ನ ರಥಗಳಲ್ಲಿ ಸವಾರಿ

ಜಗನ್ನಾಥ ದೇವಾಲಯದ ಮೂರು ದೇವರುಗಳಾದ ಜಗನ್ನಾಥ, ಬಲರಾಮ್ ಮತ್ತು ಸುಭದ್ರಾ ಮೂರು ವಿಭಿನ್ನ ರಥಗಳಲ್ಲಿ ಸವಾರಿ ಮಾಡುತ್ತಾರೆ. ಈ ಕಾರಣಕ್ಕಾಗಿ ರಥಯಾತ್ರೆಯನ್ನು ರಥೋತ್ಸವ ಎಂದು ಕರೆಯುತ್ತಾರೆ. ಅವರ ವಿಭಿನ್ನ ರಥಗಳನ್ನು ನಂದಿಘೋಷ, ತಾಳಧ್ವಜ ಮತ್ತು ದೇವದಳನ ಎಂದು ಕರೆಯಲಾಗುತ್ತದೆ. ಭಗವಾನ್ ಜಗನ್ನಾಥನ ನಂದಿಘೋಷ ರಥವು ಹದಿನೆಂಟು ಚಕ್ರಗಳನ್ನು ಹೊಂದಿದೆ. ಭಗವಾನ್ ಬಲರಾಮನ ತಾಳಧ್ವಜ ರಥವು ಹದಿನಾರು ಚಕ್ರಗಳನ್ನು ಹೊಂದಿದೆ ಮತ್ತು ಸುಭದ್ರೆಯ ಪದ್ಮಧ್ವಜ ರಥವು ಹದಿನಾಲ್ಕು ಚಕ್ರಗಳನ್ನು ಹೊಂದಿದೆ.


2. ದೇವಾಲಯದ ಇತಿಹಾಸ ಸಾರುವ ರಥ

ಭಗವಾನ್ ಜಗನ್ನಾಥ ಮತ್ತು ಇತರ ಎರಡು ದೇವತೆಗಳ ರಥಗಳ ಮೇಲ್ಭಾಗವನ್ನು ಈ ದೇವಾಲಯದ ನಿರ್ಮಾಣದ ಇತಿಹಾಸವನ್ನು ನೆನಪಿಸುತ್ತದೆ. ನೂರಾರು ಯಾತ್ರಿಕರು ಮತ್ತು ಭಕ್ತರು ರಥಗಳನ್ನು ಹಗ್ಗದಿಂದ ಎಳೆಯುತ್ತಾರೆ. ಉತ್ಸಾಹ ಮತ್ತು ಸಮರ್ಪಣೆಯ ಭಾವವನ್ನು ತೋರಿಸಿ ರೋಮಾಂಚಕ ಪ್ರದರ್ಶನವನ್ನು ಸೃಷ್ಟಿಸುತ್ತಾರೆ. ರಥದ ಮೇಲಾವರಣಗಳನ್ನು ತಯಾರಿಸಲು ಸುಮಾರು 1200 ಮೀಟರ್ ಬಟ್ಟೆಯನ್ನು ಬಳಸಲಾಗುತ್ತದೆ. ಇದಕ್ಕಾಗಿ 15 ದರ್ಜಿಗಳು ಒಟ್ಟಾಗಿ ಕೆಲಸ ಮಾಡುತ್ತಾರೆ.

3. ಪ್ರತಿ ವರ್ಷ ಹೊಸ ರಥ

ಪ್ರತಿ ವರ್ಷ ದೇವರ ರಥಗಳನ್ನು ಹೊಸದಾಗಿ ನಿರ್ಮಿಸಲಾಗುತ್ತದೆ ಎಂಬ ಅಂಶವು ರಥಯಾತ್ರೆಯ ಅತ್ಯಂತ ಪ್ರಮುಖ ಅಂಶಗಳಲ್ಲಿ ಒಂದಾಗಿದೆ. ಇದರಲ್ಲಿ ಬಳಸಲಾಗುವ ಹೊಸ ವಸ್ತುಗಳಲ್ಲಿ ಮರ ಕೂಡ ಒಂದಾಗಿದೆ. ಆದರೂ ರಥಗಳ ಪ್ರಕಾರ, ನಿರ್ಮಾಣ, ಶೈಲಿ ಮತ್ತು ಪ್ರಮಾಣಗಳು ಎಂದಿಗೂ ಬದಲಾಗುವುದಿಲ್ಲ. ವಿಶೇಷವೆಂದರೆ, ಪ್ರತಿ ರಥದ ಮುಂಭಾಗದಲ್ಲಿ ನಾಲ್ಕು ಮರದ ಕುದುರೆಗಳನ್ನು ಜೋಡಿಸಲಾಗುತ್ತದೆ.

4. ರಥ ಚಲಿಸಲು ಅಪಾರ ಶ್ರಮ ಬೇಕು

ಒಡಿಶಾ ರಥ ಯಾತ್ರಾ ಉತ್ಸವದಲ್ಲಿ ರಥಗಳನ್ನು ತಳ್ಳಲು ನೂರಾರು ಭಕ್ತರು ಸೇರುತ್ತಾರೆ. ಪ್ರಾರಂಭದಲ್ಲಿ ತೀವ್ರವಾದ ಒತ್ತಡ ಮತ್ತು ಎಳೆತದ ಹೊರತಾಗಿಯೂ ಭಗವಾನ್ ಜಗನ್ನಾಥನ ರಥವು ನಿಶ್ಚಲವಾಗಿರುತ್ತದೆ. ಹಲವಾರು ಗಂಟೆಗಳ ಶ್ರಮದ ಅನಂತರವೇ ರಥವು ಚಲಿಸಲು ಪ್ರಾರಂಭಿಸುತ್ತದೆ.

5. ದೇವರ ನೆಚ್ಚಿನ ಸಿಹಿತಿಂಡಿ

ಗುಂಡಿಚಾ ದೇವಸ್ಥಾನದಲ್ಲಿ ಒಂಬತ್ತು ದಿನಗಳನ್ನು ಕಳೆದ ಅನಂತರ, ಜಗನ್ನಾಥ ಮತ್ತು ಅವರ ಒಡಹುಟ್ಟಿದವರು ತಮ್ಮ ಸ್ವಂತ ಮನೆಗೆ ಮರಳುತ್ತಾರೆ. ಒಡಿಶಾದಲ್ಲಿ ವ್ಯಾಪಕವಾಗಿ ಸೇವಿಸಲ್ಪಡುವ ಪೋಡಾ ಪಿತಾ ದೇವರ ನೆಚ್ಚಿನ ಸಿಹಿತಿಂಡಿಯಾಗಿದೆ. ಹಿಂದಿರುಗುವ ದಾರಿಯಲ್ಲಿ, ಅದನ್ನು ವಿತರಿಸಲಾಗುತ್ತದೆ.


6. ಪರಿಸರ ಜಾಗೃತಿ ಮೂಡಿಸಿದ ರಥ ಯಾತ್ರೆ

ಒಡಿಶಾ ರಥ ಯಾತ್ರಾ ಉತ್ಸವ 2007ರಲ್ಲಿ ವಿಭಿನ್ನವಾಗಿ ಆಚರಣೆ ಮಾಡಲಾಯಿತು. ಇದು ಸಾಂಪ್ರದಾಯಿಕ ಆಚರಣೆಗಳಿಂದ ಭಿನ್ನವಾಗಿತ್ತು. ಪರಿಸರ ಜಾಗೃತಿ, ಅರಣ್ಯಗಳನ್ನು ರಕ್ಷಿಸುವ ಅಗತ್ಯತೆ ಸಾರಲಾಯಿತು. ಗಿಡಮೂಲಿಕೆಗಳ ಸಸ್ಯಗಳು ಮತ್ತು ಸಸಿಗಳನ್ನು ರಥಗಳ ಮೇಲಿರುವ ವಿಗ್ರಹಗಳ ಬದಲಿಗೆ ಇರಿಸಲಾಯಿತು. ಇದು ಭಾರತದ ಚೊಚ್ಚಲ ಹಸಿರು ರಥ ಯಾತ್ರೆ ಎಂದು ಪ್ರಸಿದ್ಧಿ ಪಡೆಯಿತು. ಅದರ ಅನಂತರ ಮರಗಳನ್ನು ನೆಡುವ ಸಂಪ್ರದಾಯ ಆಚರಣೆಯಲ್ಲಿದೆ.

ಇದನ್ನೂ ಓದಿ: Puri Jagannath Temple: ಪುರಿ ಜಗನ್ನಾಥ ದೇವಾಲಯದ 10 ಅದ್ಭುತ ಸಂಗತಿಗಳಿವು!

7. ವಾರ ಮೊದಲು ದೇವಸ್ಥಾನ ಬಂದ್‌

ಆಚರಣೆಯ ಒಂದು ವಾರದ ಮೊದಲು ಪುರಿ ಜಗನ್ನಾಥ ದೇವಾಲಯದ ಮುಖ್ಯ ಬಾಗಿಲನ್ನು ಮುಚ್ಚಲಾಗುತ್ತದೆ. ಈ ಸಂದರ್ಭದಲ್ಲಿ ಜಗನ್ನಾಥ ದೇವರಿಗೆ ತೀವ್ರ ಜ್ವರ ಉಂಟಾಗುತ್ತದೆ, ಈ ಅವಧಿಯಲ್ಲಿ ವಿಶ್ರಾಂತಿ ಪಡೆಯಬೇಕು., ಬಳಿಕ ಚಿಕ್ಕಮ್ಮನ ಮನೆಗೆ ದೇವರು ತೆರಳುತ್ತಾನೆ ಎನ್ನುವ ನಂಬಿಕೆ ಇದೆ. ಹೀಗಾಗಿ ಈ ಅವಧಿಯಲ್ಲಿ ಗರ್ಭಗುಡಿಯಲ್ಲಿ ದೇವರ ದರ್ಶನ ಇರುವುದಿಲ್ಲ.

Continue Reading
Advertisement
Abhishek Sharma
ಪ್ರಮುಖ ಸುದ್ದಿ12 mins ago

Abhishek Sharma : ಜಿಂಬಾಬ್ವೆ ವಿರುದ್ಧ ಶತಕ ಬಾರಿಸಿ ಅಪರೂಪದ ದಾಖಲೆ ಬರೆದ ಅಭಿಷೇಕ್ ಶರ್ಮಾ

Bengaluru's Second Airport
ಕರ್ನಾಟಕ15 mins ago

Bengaluru’s Second Airport: ಬೆಂಗಳೂರಿನಲ್ಲಿ ಮತ್ತೊಂದು ವಿಮಾನ ನಿಲ್ದಾಣ? ಸಚಿವ ಎಂ.ಬಿ. ಪಾಟೀಲ್ ಸುಳಿವು

Mahua Moitra
ದೇಶ29 mins ago

Mahua Moitra: ಹೊಸ ಕಾನೂನಿನಂತೆ ಟಿಎಂಸಿ ಎಂಪಿ ಮಹುವಾ ಮೊಯಿತ್ರಾ ವಿರುದ್ಧ ಎಫ್‌ಐಆರ್;‌ ಕಾರಣ ಇಲ್ಲಿದೆ

Self harming
ವಿಜಯನಗರ44 mins ago

Self Harming : ನಿದ್ದೆ ಇಲ್ಲದೇ ಒದ್ದಾಟ; ಬೇವಿನ ಮರಕ್ಕೆ ನೇಣು ಬಿಗಿದುಕೊಂಡ ಆಟೋ ಚಾಲಕ

Land Dispute
ಕರ್ನಾಟಕ48 mins ago

Land Dispute: ಬೆಂಗಳೂರಿನ 93 ವರ್ಷದ ಹಳೇ ಶಾಲೆಯ ಕಾಂಪೌಂಡ್‌ ಧ್ವಂಸ; ಮೂವರ ವಿರುದ್ಧ ಕೇಸ್‌

Vastu Tips
ಧಾರ್ಮಿಕ1 hour ago

Vastu Tips: ಆರ್ಥಿಕ ಸಂಕಷ್ಟ ದೂರವಾಗಿ ಶ್ರೀಮಂತರಾಗಬೇಕೆ? ಈ ವಾಸ್ತು ನಿಯಮ ಪಾಲಿಸಿ

Union Budget 2024
ಬಜೆಟ್ 20241 hour ago

Union Budget 2024: ಘೋಷಣೆ ಸೋರಿಕೆಯಿಂದ ಹಲ್ವಾ ತಿನ್ನುವವರೆಗೆ; ಕೇಂದ್ರ ಬಜೆಟ್‌ನ 10 ಆಸಕ್ತಿದಾಯಕ ಸಂಗತಿಗಳಿವು

Sanath Jayasuriya
ಪ್ರಮುಖ ಸುದ್ದಿ1 hour ago

Sanath Jayasuriya : ಬ್ಯಾಟಿಂಗ್​ ದಿಗ್ಗಜ ಸನತ್​ ಜಯಸೂರ್ಯ ಶ್ರೀಲಂಕಾ ಕ್ರಿಕೆಟ್​ ತಂಡದ ನೂತನ ಕೋಚ್​

Yogi Adityanath
ದೇಶ1 hour ago

Yogi Adityanath: ನಿಂತ ಜಾಗದಲ್ಲೇ ಬಡ ಮಹಿಳೆಗೆ ಮನೆ ಮಂಜೂರು ಮಾಡಿದ ಯೋಗಿ ಆದಿತ್ಯನಾಥ್;‌ ಇದು ‌Instant ಮಾನವೀಯತೆ

leopard attack
ರಾಯಚೂರು1 hour ago

Leopard Attack : ದಾಳಿ ಮಾಡಿದ ಚಿರತೆಯನ್ನು ಹೊಡೆದು ಕೊಂದು ಆಂಬ್ಯುಲೆನ್ಸ್‌ಗೆ ಹಾಕಿದ ಗ್ರಾಮಸ್ಥರು

Sharmitha Gowda in bikini
ಕಿರುತೆರೆ9 months ago

Geetha Serial Kannada: ನಿದ್ದೆ ಕದ್ದ ಚೋರಿ! ನಟಿ `ಭಾನುಮತಿ’ ಹಾಟ್‌ ಪೋಟೊಗಳಿಗೆ ಫ್ಯಾನ್ಸ್ ಫುಲ್ ಫಿದಾ

Kannada Serials
ಕಿರುತೆರೆ9 months ago

Kannada Serials TRP: 2ನೇ ಸ್ಥಾನದಲ್ಲಿ 2 ಧಾರಾವಾಹಿಗಳು; ಟಿಆರ್‌ಪಿ ರೇಸ್‌ನಲ್ಲಿಲ್ಲ ಭಾಗ್ಯಲಕ್ಷ್ಮೀ!

Bigg Boss- Saregamapa 20 average TRP
ಕಿರುತೆರೆ9 months ago

Kannada Serials TRP: ಏಳನೇ ಸ್ಥಾನಕ್ಕೆ ʻಅಮೃತಧಾರೆʼ ಕುಸಿತ; ಬಿಗ್‌ ಬಾಸ್‌-ಸರಿಗಮಪ ಟಿಆರ್‌ಪಿ ಎಷ್ಟು?

galipata neetu
ಕಿರುತೆರೆ7 months ago

Kanyadana Serial: ಕಿರುತೆರೆಗೆ ಮತ್ತೆ ಎಂಟ್ರಿ ಕೊಟ್ಟ ʻಗಾಳಿಪಟʼ ಖ್ಯಾತಿಯ ʻನೀತುʼ!

Kannada Serials
ಕಿರುತೆರೆ9 months ago

Kannada Serials TRP: ನಾಲ್ಕನೇ ಸ್ಥಾನಕ್ಕೆ ಕುಸಿತ ಕಂಡ ʻಸೀತಾ ರಾಮʼ; ಟಿಆರ್‌ಪಿ ರೇಸ್‌ಗೆ ʻಭಾಗ್ಯಲಕ್ಷ್ಮಿʼ ಬ್ಯಾಕ್‌!

Kannada Serials
ಕಿರುತೆರೆ9 months ago

Kannada Serials TRP: ಟಿಆರ್‌ಪಿಯಲ್ಲಿ ʻಭಾಗ್ಯಲಕ್ಷ್ಮೀʼ ಹವಾ; ʻಪುಟ್ಟಕ್ಕನ ಮಕ್ಕಳುʼ ಧಾರಾವಾಹಿಗೆ ಸಂಕಷ್ಟ!

Bigg Boss' dominates TRP; Sita Rama fell to the sixth position
ಕಿರುತೆರೆ8 months ago

Kannada Serials TRP: ಟಿಆರ್‌ಪಿಯಲ್ಲಿ ʻಬಿಗ್ ಬಾಸ್ʼದೇ ಮೇಲುಗೈ; 6ನೇ ಸ್ಥಾನಕ್ಕೆ ಕುಸಿದ ʻಸೀತಾ ರಾಮʼ

geetha serial Dhanush gowda engagement
ಕಿರುತೆರೆ7 months ago

Dhanush Gowda: ಗೀತಾ ಧಾರಾವಾಹಿ ನಟನ ನಿಶ್ಚಿತಾರ್ಥ; ಭವ್ಯಾಳ ಕಮೆಂಟ್‌ ಬಾಕ್ಸ್‌ ಆಫ್‌!

varun
ಕಿರುತೆರೆ8 months ago

Brindavana Serial: ʼಬೃಂದಾವನʼ ಧಾರಾವಾಹಿಯಲ್ಲಿ ದೊಡ್ಡ ಟ್ವಿಸ್ಟ್‌; ಪ್ರಮುಖ ಪಾತ್ರಧಾರಿಯೇ ಬದಲು

Kannada Serials
ಕಿರುತೆರೆ10 months ago

Kannada Serials TRP: ಟಿಆರ್‌ಪಿಯಲ್ಲಿ ಏರಿಕೆ ಕಂಡ ʻಅಮೃತಧಾರೆʼ; ʻಗಟ್ಟಿಮೇಳʼಕ್ಕೆ ನಾಲ್ಕನೇ ಸ್ಥಾನ!

Davanagere news
ಮಳೆ2 hours ago

Davanagere News : ಆ ಗ್ರಾಮಕ್ಕೆ ಕಾಲಿಡದ ವರುಣ! ಮಳೆಗಾಗಿ ಗ್ರಾಮಸ್ಥರಿಂದ ಕಂತೆ ಭಿಕ್ಷೆ

Karnataka Rain
ಮಳೆ3 hours ago

Karnataka Rain : ವೀಕೆಂಡ್‌ನಲ್ಲಿ ಸಿಲಿಕಾನ್‌ ಸಿಟಿಯಲ್ಲಿ ಮಳೆ ಮೋಡಿ; ಮತ್ತೆ ಗುಡ್ಡ ಕುಸಿತ ಶುರು

karnataka weather Forecast
ಮಳೆ13 hours ago

Karnataka Weather : ವೇಗವಾಗಿ ಬೀಸುವ ಗಾಳಿ ಜತೆಗೆ ಅಬ್ಬರಿಸಲಿದೆ ಮಳೆ; ಈ ಜಿಲ್ಲೆಗಳಿಗೆ ಎಚ್ಚರಿಕೆ

karnataka weather Forecast
ಮಳೆ1 day ago

Karnataka Weather : ಚಾರಣಪ್ರಿಯರಿಗೆ ಶಾಕ್‌; ಭಾರಿ ಮಳೆಯಿಂದಾಗಿ ಈ ಜಾಗಗಳಿಗೆ ಟ್ರೆಕ್ಕಿಂಗ್‌ ನಿಷೇಧ

Murder case
ಯಾದಗಿರಿ1 day ago

Murder case : ಯಾದಗಿರಿಯಲ್ಲಿ ಹಸುಗೂಸನ್ನು ಬಾವಿಗೆ ಎಸೆದು ಕೊಂದರು ಹಂತಕರು

karnataka Rain
ಮಳೆ1 day ago

Karnataka Rain : ಭಾರಿ ಗಾಳಿ- ಮಳೆಗೆ ಹಾರಿದ ಅಂಗಡಿಯ ತಗಡು; ಮಾಗುಂಡಿ-ಬಾಳೆಹೊನ್ನೂರು ಮಾರ್ಗ ಬಂದ್

Food Poisoning
ರಾಯಚೂರು1 day ago

Food Poisoning : ಮೊರಾರ್ಜಿ ವಸತಿ ಶಾಲೆ ಅವ್ಯವಸ್ಥೆ; ಊಟ ಸೇವಿಸಿದ 25ಕ್ಕೂ ಹೆಚ್ಚು ವಿದ್ಯಾರ್ಥಿಗಳು ಅಸ್ವಸ್ಥ

Wild Animal Attack Elephant attack
ರಾಮನಗರ1 day ago

Wild Animal Attack : ತೋಟದಲ್ಲಿ ನೀರು ಹಾಯಿಸುತ್ತಿದ್ದವನ ತುಳಿದು ಸಾಯಿಸಿದ ಆನೆ

karnataka Weather Forecast
ಮಳೆ2 days ago

Karnataka Weather : ಕರಾವಳಿ, ಮಲೆನಾಡಿನಲ್ಲಿ ಇಂದು ನಾನ್‌ ಸ್ಟಾಪ್‌ ಮಳೆ; ಬೆಂಗಳೂರಲ್ಲಿ ಹೇಗೆ?

karnataka Weather Forecast
ಮಳೆ2 days ago

Karnataka Weather: ಧಾರಾಕಾರ ಮಳೆಗೆ ಜನರ ಒದ್ದಾಟ- ಸೇತುವೆಗಳು ಮುಳುಗಿ ಪರದಾಟ; ಶಾಲಾ-ಕಾಲೇಜುಗಳಿಗೆ ರಜೆ

ಟ್ರೆಂಡಿಂಗ್‌