Lok Sabha Election 2024: ಬೀದರ್‌, ಕೊಪ್ಪಳಕ್ಕೆ ಬಿಜೆಪಿಯಿಂದ ಅಚ್ಚರಿಯ ಅಭ್ಯರ್ಥಿ? ಬಳತೆ, ಮಲ್ಕಾಪುರೆಗೆ ಟಿಕೆಟ್? - Vistara News

Lok Sabha Election 2024

Lok Sabha Election 2024: ಬೀದರ್‌, ಕೊಪ್ಪಳಕ್ಕೆ ಬಿಜೆಪಿಯಿಂದ ಅಚ್ಚರಿಯ ಅಭ್ಯರ್ಥಿ? ಬಳತೆ, ಮಲ್ಕಾಪುರೆಗೆ ಟಿಕೆಟ್?

Lok Sabha Election 2024: ಬಿಜೆಪಿಯಲ್ಲಿ ಅಚ್ಚರಿಯ ಬೆಳವಣಿಗೆಯೊಂದು ನಡೆಯುತ್ತಿದ್ದು, ಬೀದರ್‌ ಹಾಗೂ ಕೊಪ್ಪಳದ ಹಾಲಿ ಸಂಸದರಿಗೆ ಕೊಕ್‌ ಕೊಡುವ ಎಲ್ಲ ಸಾಧ್ಯತೆಗಳೂ ಇವೆ ಎನ್ನಲಾಗಿದೆ.

VISTARANEWS.COM


on

Lok Sabha Election 2024 Balate adn Malkapure to be get Bidar and Koppal constituency
ಮಹತ್ವದ, ಕುತೂಹಲಕರ ಸುದ್ದಿಗಾಗಿ ಫಾಲೊ ಮಾಡಿ
Koo

ಬೆಂಗಳೂರು: ಲೋಕಸಭಾ ಚುನಾವಣೆ (Lok Sabha Election 2024) ಹಿನ್ನೆಲೆಯಲ್ಲಿ ಬಿಜೆಪಿಯಲ್ಲಿ ಅಭ್ಯರ್ಥಿಗಳ ಆಯ್ಕೆ ಕಸರತ್ತು ನಡೆಯುತ್ತಿದೆ. ಈಗಾಗಲೇ ಹಾಲಿ ಸಂಸದರ ಬಗ್ಗೆ ಎರಡು ಮೂರು ಸರ್ವೆಗಳನ್ನು ಮಾಡಿಸಿ ರಿಪೋರ್ಟ್‌ (Survey Report) ಕಾರ್ಡ್‌ ಇಟ್ಟುಕೊಂಡಿರುವ ಹೈಕಮಾಂಡ್‌ ತನ್ನದೇ ಲೆಕ್ಕಾಚಾರದಲ್ಲಿ ತೊಡಗಿದೆ. ಈ ಹಿನ್ನೆಲೆಯಲ್ಲಿ ಯಾವ ಕ್ಷೇತ್ರದಲ್ಲಿ ಹಾಲಿ ಅಭ್ಯರ್ಥಿಗಳನ್ನು ಉಳಿಸಿಕೊಳ್ಳಬೇಕು? ಯಾವ ಕ್ಷೇತ್ರದಲ್ಲಿ ಕೈಬಿಡಬೇಕು? ಆ ಜಾಗಕ್ಕೆ ಯಾರನ್ನು ಅಭ್ಯರ್ಥಿಯನ್ನಾಗಿ ಮಾಡಬೇಕು? ಎಂಬಿತ್ಯಾದಿಗಳ ಬಗ್ಗೆ ಈಗಾಗಲೇ ಚರ್ಚೆಗಳು ನಡೆಯುತ್ತಿವೆ. ಈ ಸಂಬಂಧ ರಾಜ್ಯ ನಾಯಕರ ಅಭಿಪ್ರಾಯವನ್ನೂ ಪಡೆದುಕೊಳ್ಳಲಾಗುತ್ತಿದೆ. ಇದೇ ವೇಳೆ ಬಿಜೆಪಿಯಲ್ಲಿ ಅಚ್ಚರಿಯ ಬೆಳವಣಿಗೆಯೊಂದು ನಡೆಯುತ್ತಿದ್ದು, ಬೀದರ್‌ ಹಾಗೂ ಕೊಪ್ಪಳದ ಹಾಲಿ ಸಂಸದರಿಗೆ ಕೊಕ್‌ ಕೊಡುವ ಎಲ್ಲ ಸಾಧ್ಯತೆಗಳೂ ಇವೆ ಎನ್ನಲಾಗಿದೆ.

ಸದ್ಯ ಬಿಜೆಪಿಯಲ್ಲಿ ನಡೆಯುತ್ತಿರುವ ಬೆಳವಣಿಗೆಯಲ್ಲಿ ಬೀದರ್ ಲೋಕಸಭಾ ಕ್ಷೇತ್ರದ (Bidar Lok Sabha constituency) ಹಾಲಿ ಸಂಸದ ಭಗವಂತ ಖೂಬಾಗೆ (Bhagwanth Khuba) ಟಿಕೆಟ್ ಡೌಟ್ ಎನ್ನಲಾಗಿದೆ. ಹೀಗಾಗಿ ಅವರ ಜಾಗಕ್ಕೆ ಚನ್ನಬಸವಣ್ಣ ಬಳತೆ ಅವರಿಗೆ ಟಿಕೆಟ್ ಸಿಗುವ ಸಾಧ್ಯತೆ ಇದೆ ಎಂದು ಬಿಜೆಪಿ ಮೂಲಗಳು ತಿಳಿಸಿವೆ. ಅಲ್ಲದೆ, ಈ ಕ್ಷೇತ್ರಕ್ಕೆ ರಘುನಾಥ್ ರಾವ್ ಮಲ್ಕಾಪುರೆ (Raghnath Rao Malakapure) ಅವರಿಂದಲೂ ಟಿಕೆಟ್ ಲಾಬಿ ನಡೆಯುತ್ತಿದೆ ಎನ್ನಲಾಗಿದೆ.

ಮಲ್ಕಾಪುರೆಗೆ ಕೊಪ್ಪಳ ಟಿಕೆಟ್?‌

ರಘುನಾಥ್ ರಾವ್ ಮಲ್ಕಾಪುರೆ ಅವರು ಬೀದರ್‌ ಕ್ಷೇತ್ರದಿಂದ ಟಿಕೆಟ್‌ ಬಯಸಿದರೂ ಅವರಿಗೆ ಕೊಪ್ಪಳ ಲೋಕಸಭಾ ಕ್ಷೇತ್ರಕ್ಕೆ (Koppal Lok Sabha constituency) ಟಿಕೆಟ್‌ ನೀಡುವ ಬಗ್ಗೆ ಬಿಜೆಪಿ ಹೈಕಮಾಂಡ್‌ ಒಲವು ತೋರಿದೆ ಎನ್ನಲಾಗಿದೆ. ಇದಕ್ಕೆ ಕಾರಣ, ಮಲ್ಕಾಪುರೆ ಅವರು ಕುರುಬ ಸಮುದಾಯಕ್ಕೆ ಸೇರಿದವರಾಗಿದ್ದಾರೆ. ಬೀದರ್‌ನಲ್ಲಿ ಕುರುಬ ಸಮುದಾಯದ ಮತಗಳು ಇಲ್ಲ. ಆದರೆ, ಕೊಪ್ಪಳದಲ್ಲಿ ಕುರುಬ ಸಮುದಾಯದವರು ನಿರ್ಣಾಯಕ ಪಾತ್ರವನ್ನು ವಹಿಸಲಿದ್ದಾರೆ. ಹೀಗಾಗಿ ಅದೇ ಸಮುದಾಯದ ರಘುನಾಥ್ ರಾವ್ ಮಲ್ಕಾಪುರೆ ಅವರಿಗೆ ಟಿಕೆಟ್‌ ಕೊಟ್ಟರೆ ಬಿಜೆಪಿ – ಜೆಡಿಎಸ್‌ ಮತಗಳೂ ಸೇರಿದಂತೆ ಕುರುಬ ಸಮುದಾಯದ ಮತಗಳೂ ಸೇರಿದಂತೆ ಗೆಲುವು ಕಟ್ಟಿಟ್ಟ ಬುತ್ತಿ ಎಂಬ ಲೆಕ್ಕಾಚಾರದಲ್ಲಿ ಬಿಜೆಪಿ ಇದೆ. ಹೀಗಾಗಿ ಅವರಿಗೆ ಕೊಪ್ಪಳದಲ್ಲಿ ಟಿಕೆಟ್ ಕೊಡಿಸುವ ಬಗ್ಗೆ ರಾಜ್ಯ ನಾಯಕರು ಸಲಹೆ ನೀಡಿದ್ದಾರೆ.

ಕೊಪ್ಪಳ ಒಪ್ಪದ ರಘುನಾಥ್ ರಾವ್ ಮಲ್ಕಾಪುರೆ!

ಕೊಪ್ಪಳದಲ್ಲಿ ಸ್ಪರ್ಧೆ ಮಾಡುವಂತೆ ಎಷ್ಟೇ ಹೇಳಿದರೂ ರಘುನಾಥ್ ರಾವ್ ಮಲ್ಕಾಪುರೆ ಅವರು ಒಪ್ಪುತ್ತಿಲ್ಲ ಎನ್ನಲಾಗಿದೆ. ಕಾರಣ, ತಾವು ಸ್ಥಳೀಯರಲ್ಲ. ಜತೆಗೆ ಕೊಪ್ಪಳಕ್ಕೂ ನನಗೂ ಸಂಬಂಧವೇ ಇಲ್ಲ. ಹೀಗಿರುವಾಗ ಅಲ್ಲಿ ಸ್ಪರ್ಧೆ ಮಾಡುವುದು ಕಷ್ಟ ಎಂದು ಹೇಳಿದ್ದಾರೆ. ನನಗೆ ಟಿಕೆಟ್‌ ಕೊಡುವುದಾದರೆ ಬೀದರ್ ಲೋಕಸಭಾ ಕ್ಷೇತ್ರದಿಂದಲೇ ಕೊಡಿ ಎಂದು ಮನವಿ ಮಾಡಿದ್ದಾರೆ ಎನ್ನಲಾಗಿದೆ.

ಇದನ್ನೂ ಓದಿ: Lok Sabha Election 2024: ಗೋಬ್ಯಾಕ್ ಶೋಭಾ ಅಭಿಯಾನ; ತೇಜಸ್ವಿ ಸೂರ್ಯ ಸಹೋದರ ಸಂಬಂಧಿ ಬೆಂಬಲ!

ಕೊಪ್ಪಳದಲ್ಲಿ ಕರಡಿಗೆ ಜನವಿರೋಧ?

ಕೊಪ್ಪಳದ ಹಾಲಿ ಸಂಸದ ಕರಡಿ ಸಂಗಣ್ಣ ಅವರಿಗೆ ಜನವಿರೋಧ ಇದೆ ಎಂದು ಬಿಜೆಪಿ ಮಾಡಿಸಿದ ಸರ್ವೆಯಲ್ಲಿ ತಿಳಿದುಬಂದಿದೆ ಎನ್ನಲಾಗಿದೆ. ಹೀಗಾಗಿ ಅಭ್ಯರ್ಥಿಯನ್ನು ಬದಲಾವಣೆ ಮಾಡಲು ಬಿಜೆಪಿ ಪ್ಲ್ಯಾನ್‌ ಮಾಡಿದೆ. ಅವರಿಗೆ ಟಿಕೆಟ್‌ ತಪ್ಪಿಸಿದರೂ ಕುರುಬ ಸಮುದಾಯಕ್ಕೇ ಟಿಕೆಟ್ ಕೊಡುವ ಅಗತ್ಯ ಇದೆ ಎಂಬ ನಿಟ್ಟಿನಲ್ಲಿ ಕೊಪ್ಪಳದಿಂದ ಮಲ್ಕಾಪುರೆ ಅವರಿಗೆ ಅಭ್ಯರ್ಥಿ ಆಗುವಂತೆ ಸಲಹೆ ನೀಡಲಾಗುತ್ತಿದೆ ಎಂದು ಹೇಳಲಾಗುತ್ತಿದೆ. ಹೀಗಾಗಿ ಬದಲಾದ ಸನ್ನಿವೇಶದಲ್ಲಿ ಬೀದರ್‌ಗೆ ಚನ್ನಬಸವಣ್ಣ ಬಳತೆ ಹಾಗೂ ಕೊಪ್ಪಳಕ್ಕೆ ಮಲ್ಕಾಪುರೆ ಹೆಸರು ಎಂಟ್ರಿ ಕೊಟ್ಟಿವೆ.

ಕ್ಷಣ ಕ್ಷಣದ ಮಾಹಿತಿಗಾಗಿ Vistara News FaceBook ಪೇಜ್ ಫಾಲೋ ಮಾಡಿ
ಮಹತ್ವದ ಮಾಹಿತಿಗಾಗಿ ವಿಸ್ತಾರ ನ್ಯೂಸ್ ಆ್ಯಪ್ ಉಚಿತವಾಗಿ ಡೌನ್ ಲೋಡ್ ಮಾಡಿಕೊಳ್ಳಿ: Andriod App | IOS App
Continue Reading
Click to comment

Leave a Reply

Your email address will not be published. Required fields are marked *

ದೇಶ

Kanhaiya Kumar: ಪ್ರಚಾರದ ವೇಳೆ ಕಾಂಗ್ರೆಸ್‌ ಅಭ್ಯರ್ಥಿ ಕನ್ಹಯ್ಯ ಕುಮಾರ್‌ ಮೇಲೆ ಹಲ್ಲೆ; ವಿಡಿಯೊ ಇಲ್ಲಿದೆ

Kanhaiya Kumar: ದೆಹಲಿಯ ಕರ್ತಾರ್‌ ನಗರದಲ್ಲಿರುವ ಪಕ್ಷದ ಕಚೇರಿಯಿಂದ ಕನ್ಹಯ್ಯ ಕುಮಾರ್‌ ಅವರು ಹೊರಗೆ ಹೋಗುತ್ತಿದ್ದರು. ಇದೇ ವೇಳೆ ಏಳೆಂಟು ಜನ ಹಾರ ಹಿಡಿದುಕೊಂಡು ಬಂದರು. ಹಾರ ಹಾಕುವ ನೆಪದಲ್ಲಿ ಅವರು ಕನ್ಹಯ್ಯ ಕುಮಾರ್‌ ಮೇಲೆ ಹಲ್ಲೆ ನಡೆಸಿದರು. ಅವರ ಮೇಲೆ ಮಸಿ ಎರಚುವ ಜತೆಗೆ ತಳ್ಳಿದರು. ಘಟನೆಯಲ್ಲಿ ನಾಲ್ವರು ಮಹಿಳೆಯರಿಗೆ ಗಾಯಗಳಾಗಿವೆ. ಪತ್ರಕರ್ತರೊಬ್ಬರು ಬಿದ್ದು ಗಾಯ ಮಾಡಿಕೊಂಡಿದ್ದಾರೆ ಎಂಬುದಾಗಿ ದೂರಿನಲ್ಲಿ ಉಲ್ಲೇಖಿಸಲಾಗಿದೆ.

VISTARANEWS.COM


on

Kanhaiya Kumar
Koo

ನವದೆಹಲಿ: ಲೋಕಸಭೆ ಚುನಾವಣೆ (Lok Sabha Election 2024) ಹಿನ್ನೆಲೆಯಲ್ಲಿ ಈಶಾನ್ಯ ದೆಹಲಿ ಕಾಂಗ್ರೆಸ್‌ ಅಭ್ಯರ್ಥಿ ಕನ್ಹಯ್ಯ ಕುಮಾರ್‌ (Kanhaiya Kumar) ಅವರು ಪ್ರಚಾರ ಮಾಡುವ ವೇಳೆ ಅವರ ಮೇಲೆ ಕೆಲ ಕಿಡಿಗೇಡಿಗಳು ಹಲ್ಲೆ ನಡೆಸಿದ್ದಾರೆ. ಪೂರ್ವ ದೆಹಲಿಯ ನ್ಯೂ ಉಸ್ಮಾನ್‌ಪುರ ಪ್ರದೇಶದಲ್ಲಿ ಕನ್ಹಯ್ಯ ಕುಮಾರ್‌ ಅವರು ಚುನಾವಣೆ ಪ್ರಚಾರ ನಡೆಸುತ್ತಿದ್ದರು. ಇದೇ ವೇಳೆ, ಏಳೆಂಟು ಜನ ಅವರಿಗೆ ಹಾರ ಹಾಕಲು ಬಂದಿದ್ದು, ಹಾರ ಹಾಕಿದ ಕೂಡಲೇ ಕಾಂಗ್ರೆಸ್‌ ಅಭ್ಯರ್ಥಿ ಮೇಲೆ ಹಲ್ಲೆ ನಡೆಸಿದ್ದಾರೆ. ಕೆಲವು ಜನ ಅವರ ಮೇಲೆ ಮಸಿ ಎರಚಿದ್ದಾರೆ.

ಕನ್ಹಯ್ಯ ಕುಮಾರ್‌ ಅವರ ಮೇಲೆ ಹಲ್ಲೆ ನಡೆದ ಬಳಿಕ ಬ್ರಹ್ಮಪುರಿಯ ಆಪ್‌ ಕೌನ್ಸಿಲರ್‌ ಛಾಯಾ ಗೌರವ್‌ ಶರ್ಮಾ ಅವರು ದೂರು ದಾಖಲಿಸಿದ್ದಾರೆ. “ಕರ್ತಾರ್‌ ನಗರದಲ್ಲಿರುವ ಪಕ್ಷದ ಕಚೇರಿಯಿಂದ ಕನ್ಹಯ್ಯ ಕುಮಾರ್‌ ಅವರು ಹೊರಗೆ ಹೋಗುತ್ತಿದ್ದರು. ಇದೇ ವೇಳೆ ಏಳೆಂಟು ಜನ ಹಾರ ಹಿಡಿದುಕೊಂಡು ಬಂದರು. ಹಾರ ಹಾಕುವ ನೆಪದಲ್ಲಿ ಅವರು ಕನ್ಹಯ್ಯ ಕುಮಾರ್‌ ಮೇಲೆ ಹಲ್ಲೆ ನಡೆಸಿದರು. ಅವರ ಮೇಲೆ ಮಸಿ ಎರಚುವ ಜತೆಗೆ ತಳ್ಳಿದರು. ಘಟನೆಯಲ್ಲಿ ನಾಲ್ವರು ಮಹಿಳೆಯರಿಗೆ ಗಾಯಗಳಾಗಿವೆ. ಪತ್ರಕರ್ತರೊಬ್ಬರು ಬಿದ್ದು ಗಾಯ ಮಾಡಿಕೊಂಡಿದ್ದಾರೆ” ಎಂದು ದೂರಿನಲ್ಲಿ ಉಲ್ಲೇಖಿಸಲಾಗಿದೆ.

ಕನ್ಹಯ್ಯ ಕುಮಾರ್‌ ಮೇಲೆ ದಾಳಿ ನಡೆಸಿದ ಏಳೆಂಟು ಜನರಲ್ಲಿ ಇಬ್ಬರು ವಿಡಿಯೊ ಬಿಡುಗಡೆ ಮಾಡಿದ್ದಾರೆ. ಕೆಲ ವರ್ಷಗಳ ಹಿಂದೆ ಕನ್ಹಯ್ಯ ಕುಮಾರ್‌ ದೇಶ ಒಡೆಯುವ (ಟುಕ್ಡೆ ಗ್ಯಾಂಗ್‌ ಎಂದೇ ಖ್ಯಾತಿ) ಹೇಳಿಕೆ ನೀಡಿದ್ದು, ಸೇನೆಯ ವಿರುದ್ಧ ಮಾತನಾಡಿದ ಹಿನ್ನೆಲೆಯಲ್ಲಿ ಅವರು ಕನ್ಹಯ್ಯ ಕುಮಾರ್‌ ಮೇಲೆ ಹಲ್ಲೆ ನಡೆಸಿದ್ದಾರೆ ಎಂಬದಾಗಿ ಹೇಳಿದ್ದಾರೆ ಎನ್ನಲಾಗಿದೆ. ಆದಾಗ್ಯೂ, ದಾಳಿಗೆ ನಿಖರ ಕಾರಣ ಗೊತ್ತಾಗಿಲ್ಲ.

ಕನ್ಹಯ್ಯ ಸ್ಪರ್ಧೆಗೆ ಪಕ್ಷದಲ್ಲೇ ವಿರೋಧ

ಕನ್ಹಯ್ಯ ಕುಮಾರ್‌ ಅವರಿಗೆ ಕಾಂಗ್ರೆಸ್‌ ಟಿಕೆಟ್‌ ನೀಡಿರುವುದಕ್ಕೆ ಕೆಲ ದಿನಗಳ ಹಿಂದೆ ಕಾಂಗ್ರೆಸ್‌ನಲ್ಲಿಯೇ ವಿರೋಧ ವ್ಯಕ್ತವಾಗಿತ್ತು. ಪಕ್ಷದ ಪ್ರಧಾನ ಕಚೇರಿ ಎದುರು ಜಮಾನಿಸಿದ ನೂರಾರು ಕಾಂಗ್ರೆಸ್‌ ಕಾಂಗ್ರೆಸಿಗರು ಹೊರಗಿನವರು ಬೇಡ, ಸ್ಥಳೀಯರನ್ನೇ ಕಣಕ್ಕಿಳಿಸಿ ಎಂದು ಒತ್ತಾಯಿಸಿದ್ದರು. ಮೌಜ್‌ಪುರ ಮೆಟ್ರೋ ಸ್ಟೇಷನ್ ಬಳಿ ಪ್ರತಿಭಟನೆ ನಡೆದಿದ್ದು, ನಮಗೆ ಸ್ಥಳೀಯ ನಾಯಕರೇ ಬೇಕು ಎಂದು ಪ್ರತಿಭಟನಾಕಾರರು ಪಟ್ಟು ಹಿಡಿದಿದ್ದರು.‌

ಈಶಾನ್ಯ ದೆಹಲಿಯಿಂದ ಕನ್ಹಯ್ಯ ಕುಮಾರ್ ಸ್ಪರ್ಧಿಸುತ್ತಿದ್ದು, ಬಿಜೆಪಿಯ ಮನೋಜ್ ತಿವಾರಿ ವಿರುದ್ಧ ಕಣಕ್ಕೆ ಇಳಿದಿದ್ದಾರೆ. 37 ವರ್ಷದ ಕುಮಾರ್ ಎರಡನೇ ಬಾರಿಗೆ ಲೋಕಸಭಾ ಚುನಾವಣೆಯಲ್ಲಿ ಸ್ಪರ್ಧಿಸುತ್ತಿದ್ದಾರೆ. 2019ರಲ್ಲಿ, ಅವರು ಬಿಹಾರದ ಬೆಗುಸರಾಯ್​ನಿಂದ ಕಮ್ಯುನಿಸ್ಟ್ ಪಾರ್ಟಿ ಆಫ್ ಇಂಡಿಯಾ ಅಭ್ಯರ್ಥಿಯಾಗಿ ಸ್ಪರ್ಧಿಸಿದ್ದರು. ಅಲ್ಲಿ ಅವರು ಕೇಂದ್ರ ಸಚಿವ ಮತ್ತು ಭಾರತೀಯ ಜನತಾ ಪಕ್ಷದ ನಾಯಕ ಗಿರಿರಾಜ್ ಸಿಂಗ್ ವಿರುದ್ಧ ಸೋತಿದ್ದರು. ಅವರು 2021ರಲ್ಲಿ ಕಾಂಗ್ರೆಸ್ ಸೇರಿದ್ದರು.

ಇದನ್ನೂ ಓದಿ: Amit Shah: ಪ್ರಚಾರದ ವೇಳೆ ಕೇಜ್ರಿವಾಲ್‌ ನೀಡಿದ ಹೇಳಿಕೆಯಿಂದ ನ್ಯಾಯಾಂಗ ನಿಂದನೆ; ಅಮಿತ್‌ ಶಾ ವಾಗ್ದಾಳಿ

Continue Reading

ದೇಶ

Narendra Modi: ಕಾಂಗ್ರೆಸ್‌ ಗೆದ್ದರೆ ಬುಲ್ಡೋಜರ್‌ನಿಂದ ರಾಮಮಂದಿರ ನೆಲಸಮ ಎಂದ ಮೋದಿ!

Narendra Modi: ಕಾಂಗ್ರೆಸ್‌ ಹಾಗೂ ಸಮಾಜವಾದಿ ಪಕ್ಷ ಅಧಿಕಾರಕ್ಕೆ ಬಂದರೆ, ಅವರು ಬುಲ್ಡೋಜರ್‌ಗಳನ್ನು ಕಳುಹಿಸಿ ರಾಮಮಂದಿರವನ್ನು ನೆಲಸಮಗೊಳಿಸುತ್ತಾರೆ. ಪೀಳಿಗೆಗಳಿಂದ ತ್ಯಾಗ ಮಾಡಿದ ಫಲವಾಗಿ, 500 ವರ್ಷಗಳ ಹೋರಾಟದ ಫಲವಾಗಿ ರಾಮಮಂದಿರ ನಿರ್ಮಾಣ ಮಾಡಲಾಗಿದೆ. ನೀವು ನಮಗೆ ಮತ ನೀಡಿದ ಕಾರಣ ಇದೆಲ್ಲ ಸಾಧ್ಯವಾಗಿದೆ. ಆದರೆ, ಕಾಂಗ್ರೆಸ್‌ ಅಧಿಕಾರಕ್ಕೆ ಬಂದರೆ, ರಾಮಮಂದಿರವನ್ನು ನೆಲಸಮಗೊಳಿಸುತ್ತದೆ ಎಂದು ನರೇಂದ್ರ ಮೋದಿ ಹೇಳಿದರು.

VISTARANEWS.COM


on

Narendra modi
Koo

ಲಖನೌ: ಲೋಕಸಭೆ ಚುನಾವಣೆಯ (Lok Sabha Election 2024) ನಾಲ್ಕು ಹಂತದ ಮತದಾನ ಮುಗಿದರೂ ಚುನಾವಣೆ ಅಬ್ಬರ ಮಾತ್ರ ಮುಗಿದಿಲ್ಲ. ಇನ್ನೂ ಮೂರು ಹಂತದ ಮತದಾನ ಬಾಕಿ ಇರುವುದರಿಂದ ರಾಜಕೀಯ ನಾಯಕರು ತೀಕ್ಷ್ಣ ಹೇಳಿಕೆ, ವಾಗ್ದಾಳಿ, ಆರೋಪ, ಪ್ರತ್ಯಾರೋಪ ಮಾಡುತ್ತಿದ್ದಾರೆ. ಅದರಲ್ಲೂ, ಪ್ರಧಾನಿ ನರೇಂದ್ರ ಮೋದಿ (Narendra Modi) ಅವರು ರಾಮಮಂದಿರ ಸೇರಿ ಹಲವು ವಿಷಯಗಳನ್ನು ಪ್ರಸ್ತಾಪಿಸಿ ಕಾಂಗ್ರೆಸ್‌ ಸೇರಿ ಎಲ್ಲ ಪ್ರತಿಪಕ್ಷಳ ವಿರುದ್ಧ ವಾಗ್ಬಾಣ ಬಿಡುತ್ತಿದ್ದಾರೆ. “ಕಾಂಗ್ರೆಸ್‌ ಅಧಿಕಾರಕ್ಕೆ ಬಂದರೆ, ಬುಲ್ಡೋಜರ್‌ನಿಂದ ರಾಮಮಂದಿರವನ್ನು (Ram Mandir) ನೆಲಸಮಗೊಳಿಸುತ್ತಾರೆ” ಎಂದು ಶುಕ್ರವಾರ (ಮೇ 17) ವಾಗ್ದಾಳಿ ನಡೆಸಿರುವುದೇ ಇದಕ್ಕೆ ಸಾಕ್ಷಿಯಾಗಿದೆ.

ಉತ್ತರ ಪ್ರದೇಶದ ಬಾರಾಬಂಕಿಯಲ್ಲಿ ನಡೆದ ಚುನಾವಣೆ ರ‍್ಯಾಲಿಯಲ್ಲಿ ನರೇಂದ್ರ ಮೋದಿ ಮಾತನಾಡಿದರು. “ದೇಶದಲ್ಲಿ ಕಾಂಗ್ರೆಸ್ ಹಾಗೂ ಸಮಾಜವಾದಿ ಪಕ್ಷಗಳು ಅಧಿಕಾರಕ್ಕೆ ಬಂದರೆ ಅವರು ರಾಮಲಲ್ಲಾನನ್ನು ಮತ್ತೆ ಟೆಂಟ್‌ಗೆ ಕಳುಹಿಸುತ್ತಾರೆ. ಅವರು ಬುಲ್ಡೋಜರ್‌ಗಳನ್ನು ಕಳುಹಿಸಿ ರಾಮಮಂದಿರವನ್ನು ನೆಲಸಮಗೊಳಿಸುತ್ತಾರೆ. ಪೀಳಿಗೆಗಳಿಂದ ತ್ಯಾಗ ಮಾಡಿದ ಫಲವಾಗಿ, 500 ವರ್ಷಗಳ ಹೋರಾಟದ ಫಲವಾಗಿ ರಾಮಮಂದಿರ ನಿರ್ಮಾಣ ಮಾಡಲಾಗಿದೆ. ನೀವು ನಮಗೆ ಮತ ನೀಡಿದ ಕಾರಣ ಇದೆಲ್ಲ ಸಾಧ್ಯವಾಗಿದೆ. ಆದರೆ, ಕಾಂಗ್ರೆಸ್‌ ಅಧಿಕಾರಕ್ಕೆ ಬಂದರೆ, ರಾಮಮಂದಿರವನ್ನು ನೆಲಸಮಗೊಳಿಸುತ್ತದೆ” ಎಂದು ಹೇಳಿದರು.

ಸ್ವಾತಂತ್ರ್ಯ ಹೋರಾಟವನ್ನು ಉಲ್ಲೇಖಿಸಿ ಮೋದಿ ಕಾಂಗ್ರೆಸ್‌ಗೆ ಕುಟುಕಿದರು. “ದೇಶಾದ್ಯಂತ ಸ್ವಾತಂತ್ರ್ಯಕ್ಕಾಗಿ ಹೋರಾಟ ನಡೆಯುವಾಗ ದೇಶವನ್ನು ವಿಭಜನೆ ಮಾಡಲಾಗುತ್ತದೆ ಎಂಬ ಮಾತು ಕೇಳಿಬಂತು. ಆಗ ಇಡೀ ದೇಶ ಅಚ್ಚರಿಗೀಡಾಯಿತು. ದೇಶವನ್ನು ವಿಭಜನೆ ಮಾಡಲಾಗುತ್ತದೆಯೇ ಎಂಬ ಆತಂಕ ಮೂಡಿತು. ಆದರೆ, ಕಾಂಗ್ರೆಸಿಗರು ದೇಶವನ್ನು ಇಬ್ಭಾಗ ಮಾಡಿದರು. ಅವರು ಅಧಿಕಾರಕ್ಕಾಗಿ ಏನು ಬೇಕಾದರೂ ಮಾಡುತ್ತಾರೆ. ಕಾಂಗ್ರೆಸಿಗರಿಗೆ ದೇಶ ಮುಖ್ಯವಲ್ಲ. ಅವರಿಗೆ ತಮ್ಮ ಕುಟುಂಬ ಮುಖ್ಯ, ಅಧಿಕಾರ ಮುಖ್ಯ” ಎಂದು ಟೀಕಿಸಿದರು.

ಬೀಗ ಜಡಿಯುತ್ತಾರೆ ಎಂದಿದ್ದ ಮೋದಿ

ಕೆಲ ದಿನಗಳ ಹಿಂದೆಯೂ ಮೋದಿ ಅವರು ರಾಮಮಂದಿರ ಹಾಗೂ ಕಾಂಗ್ರೆಸ್‌ ಬಗ್ಗೆ ಮಾತನಾಡಿದ್ದರು. “ಬಿಜೆಪಿ ನೇತೃತ್ವದ ಎನ್‌ಡಿಎ ಮೈತ್ರಿಕೂಟವು 400 ಕ್ಷೇತ್ರಗಳಲ್ಲಿ ಗೆಲ್ಲಿಸಿ ಎಂಬುದಾಗಿ ನಾನು ನಿಮ್ಮಲ್ಲಿ ಮನವಿ ಮಾಡಲು ಹಲವು ಕಾರಣಗಳಿವೆ. ನೀವು ಬಹುಮತ ನೀಡಿದ ಕಾರಣಕ್ಕಾಗಿಯೇ ನಾವು 370ನೇ ವಿಧಿಯನ್ನು ರದ್ದುಗೊಳಿಸಿದೆವು. ಹಾಗಾಗಿ, ಕಾಂಗ್ರೆಸ್‌ 370ನೇ ವಿಧಿಯನ್ನು ಮತ್ತೆ ಜಾರಿಗೆ ತರಬಾರದು, ಅಯೋಧ್ಯೆಯ ರಾಮಮಂದಿರಕ್ಕೆ ಬಾಬ್ರಿ ಮಸೀದಿ ಬೀಗ ಜಡಿಯಬಾರದು, ನಮ್ಮ ದೇಶದ ದ್ವೀಪಗಳನ್ನು ಬೇರೆ ದೇಶಗಳಿಗೆ ನೀಡಬಾರದು, ಒಬಿಸಿ ಮೀಸಲಾತಿಯನ್ನು ಕಿತ್ತು ಧರ್ಮದ ಆಧಾರದ ಮೇಲೆ ಅಲ್ಪಸಂಖ್ಯಾತರಿಗೆ ನೀಡಬಾರದು ಎಂಬ ಕಾರಣಕ್ಕಾಗಿ ಬಿಜೆಪಿಗೆ ಬಹುಮತ ನೀಡಿ” ಎಂದಿದ್ದರು.

ಇದನ್ನೂ ಓದಿ: ಪಾಕ್‌ ಬಳಿ ಅಣು ಬಾಂಬ್‌ ಇದೆ, ಆದ್ರೆ, ಮೆಂಟೇನ್ ಮಾಡೋಕೂ ಅವರ ಬಳಿ ದುಡ್ಡಿಲ್ಲ ಎಂದ ಮೋದಿ; ಕಾಂಗ್ರೆಸ್‌ಗೆ ಚಾಟಿ

Continue Reading

ದೇಶ

Uttar Pradesh: ಉತ್ತರ ಪ್ರದೇಶದಲ್ಲಿ ಲೋಕಸಭೆ ಸಮರ; ನೀವು ತಿಳಿಯಲೇಬೇಕಾದ 5 ಕುತೂಹಲಕರ ಅಂಶಗಳು ಇಲ್ಲಿವೆ

Uttar Pradesh: 2014ರ ಲೋಕಸಭೆ ಚುನಾವಣೆಯಲ್ಲಿ ಬಿಜೆಪಿಯು ಉತ್ತರ ಪ್ರದೇಶದಲ್ಲಿ 71 ಕ್ಷೇತ್ರಗಳಲ್ಲಿ ಗೆಲುವು ಸಾಧಿಸಿತ್ತು. 2019ರಲ್ಲಿ 62 ಕ್ಷೇತ್ರಗಳಲ್ಲಿ ಗೆಲುವು ಸಾಧಿಸಿತ್ತು. ಇದು ಕೇಂದ್ರದಲ್ಲಿ ಬಿಜೆಪಿಯು ಅಧಿಕಾರಕ್ಕೆ ಬರಲು ಕಾರಣವಾಗಿತ್ತು. ಆದರೆ, ಪ್ರಸಕ್ತ ಲೋಕಸಭೆ ಚುನಾವಣೆಯಲ್ಲಿ ಉತ್ತರ ಪ್ರದೇಶದ ರಾಜಕೀಯ ಸ್ಥಿತಿಗತಿ ಹೇಗಿದೆ ಎಂಬುದರ ಮಾಹಿತಿ ಇಲ್ಲಿದೆ.

VISTARANEWS.COM


on

Uttar Pradesh
Koo

ಲಖನೌ: ಲೋಕಸಭೆ ಚುನಾವಣೆಯ (Lok Sabha Election 2024) ನಾಲ್ಕನೇ ಹಂತದ ಮತದಾನ ಮುಕ್ತಾಯಗೊಂಡಿದೆ. ಅದರಲ್ಲೂ, ದೇಶದ ಗಮನವೀಗ ಉತ್ತರ ಪ್ರದೇಶದ (Uttar Pradesh) ರಾಜಕೀಯ ಸ್ಥಿತಿಗತಿಗಳ ಮೇಲೆ ನಿಂತಿದೆ. ಮೊದಲಿನಿಂದಲೂ, ಉತ್ತರ ಪ್ರದೇಶದಲ್ಲಿ ಅತಿ ಹೆಚ್ಚು ಲೋಕಸಭೆ ಕ್ಷೇತ್ರಗಳನ್ನು ಗೆಲ್ಲುವ ಪಕ್ಷವು ಕೇಂದ್ರದಲ್ಲಿ ಅಧಿಕಾರ ಗಳಿಸುತ್ತದೆ ಎಂಬ ಮಾತಿದೆ. ಅದು ಬಹುತೇಕ ಚುನಾವಣೆಗಳಲ್ಲಿ ನಿಜವೂ ಆಗಿದೆ. ಉತ್ತರ ಪ್ರದೇಶದಲ್ಲಿ 80 ಲೋಕಸಭೆ ಕ್ಷೇತ್ರಗಳು ಇರುವುದೇ ಇದಕ್ಕೆ ಕಾರಣವಾಗಿದ್ದು, ಈ ಬಾರಿಯೂ ಕದನ ಕುತೂಹಲ ಮೂಡಿದೆ. ಹಾಗಾದರೆ, ಉತ್ತರ ಪ್ರದೇಶದಲ್ಲಿ ಲೋಕಸಭೆ ಚುನಾವಣೆ ಸಮರ ಹೇಗೆ ನಡೆಯುತ್ತಿದೆ? ಯಾವ ಪಕ್ಷಕ್ಕೆ ಗೆಲುವಾಗಬಹುದು? ಯಾವ ಪಕ್ಷಗಳ ರಾಜಕೀಯ ತಂತ್ರಗಾರಿಕೆ ಹೇಗಿದೆ ಎಂಬುದರ ಸಂಕ್ಷಿಪ್ತ ಮಾಹಿತಿ ಇಲ್ಲಿದೆ.

ರಾಮಮಂದಿರ ವಿಷಯ ಪ್ರಧಾನ

ಅಯೋಧ್ಯೆಯಲ್ಲಿ ರಾಮಮಂದಿರ ನಿರ್ಮಾಣ ಆಗಿರುವುದು ಈ ಬಾರಿಯ ಚುನಾವಣೆಯಲ್ಲಿ ಬಿಜೆಪಿಯ ಪ್ರಮುಖ ಅಸ್ತ್ರವಾಗಿದೆ. ಪ್ರಧಾನಿ ನರೇಂದ್ರ ಮೋದಿ, ಯೋಗಿ ಆದಿತ್ಯನಾಥ್‌ ಅವರು ಅಬ್ಬರದ ಪ್ರಚಾರದ ವೇಳೆ ರಾಮಮಂದಿರ ನಿರ್ಮಾಣ, ಅದು ಹೇಗೆ ಉತ್ತರ ಪ್ರದೇಶದ ಅಸ್ಮಿತೆ ಎಂಬುದರ ಕುರಿತು ಹಲವು ಬಾರಿ ಪ್ರಸ್ತಾಪಿಸಿದ್ದಾರೆ. ಇದರಿಂದಾಗಿ, ಪ್ರತಿಪಕ್ಷಗಳೂ ರಾಮನ ಜಪ ಮಾಡುವಂತಾಗಿದೆ. ವಾರಾಣಸಿಯಲ್ಲಿ ನಾಮಪತ್ರ ಸಲ್ಲಿಕೆಗೆ ಮೊದಲು ನರೇಂದ್ರ ಮೋದಿ ಅವರು ರಾಮಮಂದಿರಕ್ಕೆ ಭೇಟಿ ನೀಡಿರುವುದೂ ಪ್ರಮುಖ ಅಂಶವಾಗಿದೆ. ಅಷ್ಟರಮಟ್ಟಿಗೆ, ಉತ್ತರ ಪ್ರದೇಶದಲ್ಲಿ ರಾಮಮಂದಿರವು ಲೋಕಸಭೆ ಚುನಾವಣೆಯ ಪ್ರಬಲ ವಿಷಯವಾಗಿದೆ.

Ram Mandir

ಕಾಂಗ್ರೆಸ್‌-ಎಸ್‌ಪಿ ಮೈತ್ರಿಯ ರಣತಂತ್ರವೇನು?

ಇಂಡಿಯಾ ಒಕ್ಕೂಟದ ಸದಸ್ಯ ಪಕ್ಷಗಳೂ ಆದ ಬಿಜೆಪಿ ಹಾಗೂ ಸಮಾಜವಾದಿ ಪಕ್ಷವು ಉತ್ತರ ಪ್ರದೇಶದಲ್ಲಿ ಮೈತ್ರಿ ಮಾಡಿಕೊಂಡಿದ್ದು, ಸೀಟುಗಳನ್ನು ಹಂಚಿಕೊಂಡು ಚುನಾವಣೆ ಕಣಕ್ಕಿಳಿದಿವೆ. 2019ರಲ್ಲಿ ಬಿಎಸ್‌ಪಿ ಜತೆ ಮೈತ್ರಿ ಮಾಡಿಕೊಂಡು, ಎಡವಿದ ಸಮಾಜವಾದಿ ಪಕ್ಷವು ಈ ಬಾರಿ ಹೊಸ ಹುರುಪಿನೊಂದಿಗೆ ಕಣಕ್ಕಿಳಿದಿದೆ. 2022ರ ವಿಧಾನಸಭೆ ಚುನಾವಣೆಯಲ್ಲಿ ಶೇ.3ರಷ್ಟು ಮತ ಪಡೆದರೂ ಕಾಂಗ್ರೆಸ್‌ ಉತ್ಸಾಹದಿಂದ ಪ್ರಚಾರ ಕೈಗೊಳ್ಳುತ್ತಿದೆ. ಉತ್ತರ ಪ್ರದೇಶದಲ್ಲಿ ಶೇ.20ರಷ್ಟು ಮುಸ್ಲಿಮರ ಮತಗಳಿದ್ದು, ಇವುಗಳನ್ನು ಪಡೆಯಲು ಸಮಾಜವಾದಿ ಪಕ್ಷವು ರಣತಂತ್ರ ರೂಪಿಸುತ್ತಿದೆ. ಕಾಂಗ್ರೆಸ್‌ ಹಾಗೂ ಎಸ್‌ಪಿ ಮೈತ್ರಿಕೂಟದ ಅಭ್ಯರ್ಥಿಗಳು, ನಾಯಕರು ಜತೆಗೂಡಿ ದಲಿತರು, ಮುಸ್ಲಿಮರು ಹಾಗೂ ಹಿಂದುಳಿದವರ ಮತಗಳನ್ನು ಸೆಳೆಯಲು ಕಸರತ್ತು ನಡೆಸುತ್ತಿದ್ದಾರೆ. ಇದು ಚುನಾವಣೆಯಲ್ಲಿ ಹೇಗೆ ಫಲ ನೀಡಲಿದೆ ಎಂಬುದು ಫಲಿತಾಂಶದ ಬಳಿಕವೇ ಗೊತ್ತಾಗಲಿದೆ.

ಮಾಯಾವತಿ ಮಾಡುವರೇ ಕಮಾಲ್?‌

ಬಹುಜನ ಸಮಾಜ ಪಕ್ಷದ ಮಾಯಾವತಿ ಅವರು ಒಂದು ಕಾಲದಲ್ಲಿ ಇಡೀ ರಾಜ್ಯಾದ್ಯಂತ ಪ್ರಾಬಲ್ಯ ಹೊಂದಿದ್ದರು. ಆದರೀಗ, ಅವರ ವರ್ಚಸ್ಸು, ಪಕ್ಷದ ಹಿಡಿತ ಸಡಿಲವಾಗಿದೆ. 2014ರ ಲೋಕಸಭೆ ಚುನಾವಣೆಯಲ್ಲಿ ಶೇ.19.70ರಷ್ಟು ಮತಗಳನ್ನು ಪಡೆದರೂ ಬಿಎಸ್‌ಪಿ ಒಂದೇ ಒಂದು ಸೀಟು ಗೆದ್ದಿರಲಿಲ್ಲ. ಇನ್ನು, 2019ರ ಲೋಕಸಭೆ ಚುನಾವಣೆಯಲ್ಲಿ ಎಸ್‌ಪಿ ಜತೆ ಮೈತ್ರಿ ಮಾಡಿಕೊಂಡು ಸ್ಪರ್ಧಿಸಿದರೂ 10 ಸೀಟುಗಳು ಮಾತ್ರ ಲಭಿಸಿದ್ದವು. ಇನ್ನು 2022ರ ವಿಧಾನಸಭೆ ಚುನಾವಣೆಯಲ್ಲಿ ಬಿಎಸ್‌ಪಿ ಮತ ಪ್ರಮಾಣವು ಶೇ.12.8ಕ್ಕೆ ಕುಸಿದಿದೆ. ಮುಸ್ಲಿಮರ ಮತಗಳು ಎಂದೋ ಬಿಎಸ್‌ಪಿಯಿಂದ ದೂರಾಗಿವೆ. ಈಗೇನಿದ್ದರೂ ದಲಿತರು, ಹಿಂದುಳಿದವರ ಮತಗಳೇ ಬಿಎಸ್‌ಪಿಯ ಆಧಾರವಾಗಿವೆ. ಇಷ್ಟಾದರೂ, ಟಕ್ಕರ್‌ ಕೊಡಲು ಮಾಯಾವತಿ ರೆಡಿಯಾಗಿದ್ದಾರೆ.

Mayavati

ಯೋಗಿ ಎಂಬ ಬಲಿಷ್ಠ ನಾಯಕ

ಫೈರ್‌ಬ್ರ್ಯಾಂಡ್‌ ನಾಯಕ, ಮುಖ್ಯಮಂತ್ರಿ ಯೋಗಿ ಆದಿತ್ಯನಾಥ್‌ ಅವರು ದೇಶದಲ್ಲಿಯೇ ಪ್ರಧಾನಿ ನರೇಂದ್ರ ಮೋದಿ, ಅಮಿತ್‌ ಶಾ ನಂತರ ಬಿಜೆಪಿಯಲ್ಲಿ ಹೆಚ್ಚು ವರ್ಚಸ್ಸು ಇರುವ ನಾಯಕರಾಗಿದ್ದಾರೆ. ಹಾಗಾಗಿಯೇ, ಪ್ರಸಕ್ತ ಲೋಕಸಭೆ ಚುನಾವಣೆಯಲ್ಲಿ ಉತ್ತರ ಪ್ರದೇಶದಲ್ಲಿ 109 ರ‍್ಯಾಲಿ ಸೇರಿ ಬಿಹಾರ, ಮಧ್ಯಪ್ರದೇಶ, ರಾಜಸ್ಥಾನ, ಪಶ್ಚಿಮ ಬಂಗಾಳ, ಉತ್ತರಾಖಂಡ ಹಾಗೂ ಜಮ್ಮು-ಕಾಶ್ಮೀರದಲ್ಲಿ ಒಟ್ಟು 135 ಚುನಾವಣೆ ಸಮಾವೇಶಗಳನ್ನು ಕೈಗೊಂಡಿದ್ದಾರೆ. ಅದರಲ್ಲೂ, 2017ರಿಂದಲೂ ಉತ್ತರ ಪ್ರದೇಶ ಮುಖ್ಯಮಂತ್ರಿಯಾಗಿರುವ ಯೋಗಿ ಆದಿತ್ಯನಾಥ್‌ ಅವರು ರಾಜ್ಯದಲ್ಲಿ ಅಪರಾಧವನ್ನು ನಿಯಂತ್ರಿಸುವ ಜತೆಗೆ ಅಭಿವೃದ್ಧಿಗೂ ಆದ್ಯತೆ ನೀಡಿ ವರ್ಚಸ್ವಿ ನಾಯಕ ಎನಿಸಿದ್ದಾರೆ. ರಾಜ್ಯದಲ್ಲಿ ಇವರ ನಾಯಕತ್ವವೂ ಬಿಜೆಪಿಗೆ ವರದಾನವಾಗಿದೆ.

Yogi Adityanath

ಜಾತಿ ರಾಜಕಾರಣದ ಸಮೀಕರಣ

ಉತ್ತರ ಪ್ರದೇಶದಲ್ಲಿ ದಶಕಗಳಿಂದಲೂ ಚುನಾವಣೆಗಳಲ್ಲಿ ಜಾತಿವಾರು ಮತಗಳ ಸಮೀಕರಣವೇ ನಿರ್ಣಾಯಕವಾಗಿದೆ. 1990ರಿಂದ 2012ರವರೆಗೆ ಉತ್ತರ ಪ್ರದೇಶದಲ್ಲಿ ದಲಿತರು ಹಾಗೂ ಒಬಿಸಿ ಮತಗಳು ಬಿಜೆಪಿಯಿಂದ ದೂರವೇ ಇದ್ದವು. ಆದರೆ, 2014ರಿಂದ ರಾಜ್ಯದಲ್ಲಿ ಜಾಟವರ ಹೊರತಾದ ದಲಿತರು, ಯಾದವರ ಹೊರತಾದ ಒಬಿಸಿಯವರು ಬಿಜೆಪಿಯ ಹಿಂದುತ್ವ ರಾಜಕಾರಣಕ್ಕೆ ಬಲ ತುಂಬುತ್ತಿದ್ದಾರೆ. ಮೇಲ್ವರ್ಗದವರ ಮತಗಳು ಬಿಜೆಪಿಗೆ ಸಲೀಸಾಗಿ ಲಭಿಸಲಿವೆ. ಆದರೆ, ಜಾತಿ ಗಣತಿ, ಬಿಜೆಪಿ ಮತ್ತೆ ಅಧಿಕಾರಕ್ಕೆ ಬಂದರೆ ಸಂವಿಧಾನವನ್ನು ಬದಲಾಯಿಸುತ್ತದೆ, ಮೀಸಲಾತಿಯನ್ನು ಕಿತ್ತೊಗೆಯುತ್ತದೆ ಎಂದು ಪ್ರತಿಪಕ್ಷಗಳು ಅಬ್ಬರದ ಪ್ರಚಾರ ಮಾಡುತ್ತಿದ್ದು, ಈ ಅಂಶಗಳು ಯಾವ ರೀತಿಯ ಪರಿಣಾಮ ಬೀರಲಿವೆ ಎಂಬ ಕುತೂಹಲ ಮೂಡಿದೆ.

ಇದನ್ನೂ ಓದಿ: Narendra Modi: ನೆಹರು-ಗಾಂಧಿ ಕುಟುಂಬಸ್ಥರಿಂದ ಸಂವಿಧಾನಕ್ಕೆ ಧಕ್ಕೆ; ಪ್ರಧಾನಿ ಮೋದಿ ವಾಗ್ದಾಳಿ

Continue Reading

ದೇಶ

ಪಾಕ್‌ ಬಳಿ ಅಣು ಬಾಂಬ್‌ ಇದೆ, ಆದ್ರೆ, ಮೆಂಟೇನ್ ಮಾಡೋಕೂ ಅವರ ಬಳಿ ದುಡ್ಡಿಲ್ಲ ಎಂದ ಮೋದಿ; ಕಾಂಗ್ರೆಸ್‌ಗೆ ಚಾಟಿ

ಪಾಕಿಸ್ತಾನದ ಬಳಿ ಅಣುಬಾಂಬ್‌ ಇವೆ ಎಂದು ಎಚ್ಚರಿಸಿದ್ದ ಕಾಂಗ್ರೆಸ್‌ ನಾಯಕ ಮಣಿಶಂಕರ್‌ ಅಯ್ಯರ್‌ ಅವರಿಗೆ ಯೋಗಿ ಆದಿತ್ಯನಾಥ್‌ ತಿರುಗೇಟು ನೀಡಿದ್ದರು. “ನಾವೇನೂ ಅಣುಬಾಂಬ್‌ಗಳನ್ನು ಫ್ರಿಡ್ಜ್‌ನಲ್ಲಿ ಇರಿಸಲು ತಯಾರಿಸಿಲ್ಲ. ಇದು ಹೊಸ ಭಾರತ. ನಮ್ಮ ತಂಟೆಗೆ ಬಂದರೆ ಯಾರನ್ನೂ ನಾವು ಬಿಡುವುದಿಲ್ಲ. ಮನೆಗೆ ನುಗ್ಗಿ ಹೊಡೆಯುವ ಸಾಮರ್ಥ್ಯವನ್ನು ಭಾರತ ಕಳೆದ 10 ವರ್ಷಗಳಲ್ಲಿ ಕಂಡುಕೊಂಡಿದೆ” ಎಂದು ಹೇಳಿದ್ದರು. ಈಗ ಮೋದಿ ಕೂಡ ಕಾಂಗ್ರೆಸ್‌ಗೆ ಟಾಂಗ್‌ ಕೊಟ್ಟಿದ್ದಾರೆ.

VISTARANEWS.COM


on

Narendra Modi
Koo

ನವದೆಹಲಿ: “ಪಾಕಿಸ್ತಾನ ಬಳೆ ತೊಟ್ಟುಕೊಂಡಿಲ್ಲ. ಅದರ ಬಳಿ ಅಣು ಬಾಂಬ್‌ಗಳು ಇವೆ. ಹಾಗಾಗಿ, ಪಾಕಿಸ್ತಾನಕ್ಕೆ ಭಾರತ ಗೌರವ ನೀಡಬೇಕು” ಎಂಬುದಾಗಿ ಕಾಂಗ್ರೆಸ್‌ ನಾಯಕ ಮಣಿಶಂಕರ್‌ ಅಯ್ಯರ್‌ (Mani Shankar Aiyar) ನೀಡಿದ ಹೇಳಿಕೆಗೆ ಪ್ರಧಾನಿ ನರೇಂದ್ರ ಮೋದಿ (Narendra Modi) ತಿರುಗೇಟು ನೀಡಿದ್ದಾರೆ. “ಪಾಕಿಸ್ತಾನದ ಬಳಿ ಅಣು ಬಾಂಬ್‌ ಇವೆ ಎಂಬುದಾಗಿ ಕಾಂಗ್ರೆಸ್‌ (Congress) ಹೇಳುತ್ತದೆ. ಆದರೆ, ಅವುಗಳನ್ನು ನಿರ್ವಹಣೆ ಮಾಡುವಷ್ಟು ಹಣವೇ ಪಾಕಿಸ್ತಾನದ ಬಳಿ ಇಲ್ಲ” ಎಂದು ಮೋದಿ ವಾಗ್ದಾಳಿ ನಡೆಸಿದ್ದಾರೆ.

ಉತ್ತರ ಪ್ರದೇಶದ ಹಮೀರ್‌ಪುರದಲ್ಲಿ ನಡೆದ ಚುನಾವಣೆ ಸಮಾವೇಶದಲ್ಲಿ ನರೇಂದ್ರ ಮೋದಿ ಮಾತನಾಡಿದರು. “ಪಾಕಿಸ್ತಾನದ ಕುರಿತು ಕಾಂಗ್ರೆಸ್‌ ನಾಯಕರು ಹೆಚ್ಚು ಚಿಂತಿತರಾಗಿದ್ದಾರೆ. ನೆರೆಯ ರಾಷ್ಟ್ರದ ಬಳಿ ಅಣು ಬಾಂಬ್‌ಗಳಿವೆ ಎಂಬುದಾಗಿ ಅವರು ಹೆದರಿಸುತ್ತಾರೆ. ಆದರೆ, ಪಾಕಿಸ್ತಾನದ ಬಳಿ ಪರಮಾಣು ಬಾಂಬ್‌ಗಳಿವೆ ಹಾಗೂ ಅವುಗಳನ್ನು ನಿರ್ವಹಣೆ ಮಾಡಲು ಆಗದಂತಹ, ಅದಕ್ಕೆ ಹಣವೇ ಇಲ್ಲದಂತಹ ಪರಿಸ್ಥಿತಿ ಪಾಕಿಸ್ತಾನಕ್ಕೆ ಎದುರಾಗಿದೆ ಎಂಬುದನ್ನು ಕಾಂಗ್ರೆಸ್‌ ಅರ್ಥ ಮಾಡಿಕೊಳ್ಳುತ್ತಿಲ್ಲ” ಎಂದು ವಾಗ್ದಾಳಿ ನಡೆಸಿದರು.

“ಕಾಂಗ್ರೆಸ್‌ ಹಾಗೂ ಸಮಾಜವಾದಿ ಪಕ್ಷದ ನಾಯಕರನ್ನು ಜನ ಯಾವುದೇ ಕಾರಣಕ್ಕೂ ನಂಬಬಾರದು. ಅವರು ವೋಟ್‌ ಜಿಹಾದ್‌ಗೆ ಕರೆ ನೀಡುತ್ತಾರೆ. ಸಮಾಜವನ್ನು ಒಡೆಯುವುದು ಅವರ ಉದ್ದೇಶವಾಗಿದೆ. ಮಾಫಿಯಾವನ್ನು ಸಮಾಜವಾದಿ ಪಕ್ಷವು ಈಗಲೂ ಬೆಂಬಲಿಸುತ್ತದೆ. ಇನ್ನು, ಪಾಕಿಸ್ತಾನವು ಭಾರತದ ಮೇಲೆ ದಾಳಿ ಮಾಡುತ್ತಲೇ ಬಂದಿತು. ಆದರೆ, ಕಾಂಗ್ರೆಸ್‌ ದಾಳಿ ಮಾಡಿದವರಿಗೇ ಕ್ಲೀನ್‌ಚಿಟ್‌ ನೀಡುವ ಮೂಲಕ ತನ್ನ ನಿಲುವು ಯಾರ ಪರ ಎಂಬುದನ್ನು ಸಾಬೀತುಪಡಿಸಿತು” ಎಂದು ಮೋದಿ ಹೇಳಿದರು.

ಮಣಿಶಂಕರ್‌ ಅಯ್ಯರ್‌ ಹೇಳಿದ್ದೇನು?

“ಪಾಕಿಸ್ತಾನದ ಬಳಿ ಅಣುಬಾಂಬ್‌ಗಳಿವೆ. ಭಾರತ ಕೇವಲ ವಿಶ್ವಗುರು ಎಂದು ಹೇಳುತ್ತಾ ಇದ್ದರೆ ಸಾಲದು ನೆರೆಯ ರಾಷ್ಟ್ರ ಪಾಕಿಸ್ತಾನದ ಜತೆ ಮೊದಲು ಶಾಂತಿಯುತ ಮಾತುಕತೆ ನಡೆಸಬೇಕು. ಯಾವಾಗಲೂ ಕೈಯಲ್ಲಿ ಬಂದೂಕು ಹಿಡಿದು ಸುತ್ತಾಡಿದರೆ ಯಾವ ಕೆಲಸವೂ ಆಗಲ್ಲ, ಯಾವ ಪರಿಹಾರವೂ ಸಿಗಲ್ಲ. ಅದು ಕೇವಲ ಸಮಸ್ಯೆಯನ್ನು ಮತ್ತಷ್ಟು ಹೆಚ್ಚಿಸುತ್ತದೆ ಅಷ್ಟೇ. ಪಾಕಿಸ್ತಾನ ಕೂಡ ಸಾರ್ವಭೌಮ ರಾಷ್ಟ್ರ ಮತ್ತು ಅದಕ್ಕೆ ಅದರದ್ದೇ ಆದ ಗೌರವ ಇದೆ. ಒಂದು ವೇಳೆ ಅಲ್ಲಿ ತಲೆಕೆಟ್ಟ ಮನುಷ್ಯ ಅಧಿಕಾರಕ್ಕೆ ಬಂದರೆ, ಲಾಹೋರ್‌ನಲ್ಲಿ ಅಣುಬಾಂಬ್‌ ಸ್ಫೋಟಿಸಿದರೆ ಅದರ ಪರಿಣಾಮ ನಮ್ಮ ದೇಶದ ಭಾಗವಾಗಿರುವ ಅಮೃತಸರದ ಮೇಲೂ ಆಗುತ್ತದೆ. ಹೀಗಾಗಿ ನಾನು ಅವರನ್ನು ಗೌರವಿಸಲು ಪ್ರಾರಂಭಿಸಿದರೆ ಅವರು ಬಾಂಬ್‌ ಬಗ್ಗೆ ಯೋಚನೆ ಮಾಡುವುದೇ ಇಲ್ಲ” ಎಂದು ಅಯ್ಯರ್‌ ಹೇಳಿದ್ದರು.

ಇದನ್ನೂ ಓದಿ: PM Narendra Modi: ಬುಲ್ಡೋಜರ್‌ ಹೇಗೆ ಬಳಸಬೇಕೆಂಬುದನ್ನು ಯೋಗಿಯಿಂದ ಕಲಿಯಬೇಕು: ಪ್ರಧಾನಿ ಮೋದಿ

Continue Reading
Advertisement
ipl 2024
ಪ್ರಮುಖ ಸುದ್ದಿ2 hours ago

IPL 2024 : ಲಕ್ನೊ ವಿರುದ್ಧವೂ ಸೋತ ಮುಂಬೈ; ಹತ್ತನೇ ಸ್ಥಾನ ಕಾಯಂ

Anjali Murder Case
ಕರ್ನಾಟಕ2 hours ago

Anjali Murder Case: ಅಂಜಲಿ ಕೊಂದವನ ಎನ್‌ಕೌಂಟರ್ ಮಾಡಿ: ಸಹೋದರಿ ಪೂಜಾ ಆಗ್ರಹ

Kanhaiya Kumar
ದೇಶ2 hours ago

Kanhaiya Kumar: ಪ್ರಚಾರದ ವೇಳೆ ಕಾಂಗ್ರೆಸ್‌ ಅಭ್ಯರ್ಥಿ ಕನ್ಹಯ್ಯ ಕುಮಾರ್‌ ಮೇಲೆ ಹಲ್ಲೆ; ವಿಡಿಯೊ ಇಲ್ಲಿದೆ

Murder Case
ಬೆಂಗಳೂರು2 hours ago

Murder Case: ಯಲಹಂಕದಲ್ಲಿ ವ್ಯಕ್ತಿ ತಲೆ ಮೇಲೆ ಕಲ್ಲು ಎತ್ತಿ ಹಾಕಿ ಭೀಕರ ಕೊಲೆ

Siddaramaiah
ಸಂಪಾದಕೀಯ2 hours ago

ವಿಸ್ತಾರ ಸಂಪಾದಕೀಯ: ಗ್ರೇಸ್‌ ಮಾರ್ಕ್ಸ್‌ ಅಲ್ಲ, ಗುಣಮಟ್ಟದ ಶಿಕ್ಷಣವೇ ಫಲಿತಾಂಶಕ್ಕೆ ದಾರಿ

Pavithra Jayaram
ಸಿನಿಮಾ3 hours ago

ನಟಿ ಪವಿತ್ರ ಜಯರಾಮ್‌ ಸಾವಿನ ಬೆನ್ನಲ್ಲೇ ಪ್ರಿಯತಮ ಚಂದ್ರಕಾಂತ್ ಆತ್ಮಹತ್ಯೆ; ಖಿನ್ನತೆಗೆ ನಟ ಬಲಿ?

Rohit Sharma
ಕ್ರೀಡೆ3 hours ago

Rohit Sharma : ಆಡಿಯೊ ಬಂದ್ ಮಾಡಪ್ಪ; ಕ್ಯಾಮೆರಾಮನ್​ಗೆ ಕೈಮುಗಿದು ಬೇಡಿಕೊಂಡ ರೋಹಿತ್​ ಶರ್ಮಾ

Road Accident
ಪ್ರಮುಖ ಸುದ್ದಿ3 hours ago

Road Accident: ಕೊಪ್ಪಳ ಬಳಿ ಟ್ರ್ಯಾಕ್ಟರ್‌ಗೆ ಬಸ್ ಡಿಕ್ಕಿಯಾಗಿ ಮೂವರ ದುರ್ಮರಣ; 20ಕ್ಕೂ ಹೆಚ್ಚು ಮಂದಿಗೆ ಗಾಯ

Virat Kohli
ಕ್ರೀಡೆ4 hours ago

Virat kohli : ಪಾಕಿಸ್ತಾನಕ್ಕೆ ಬರುವೆ ಎಂದು ಅಲ್ಲಿನ ಪರ್ವತಾರೋಹಿಗೆ ಭರವಸೆ ಕೊಟ್ಟಿದ್ದ ವಿರಾಟ್​ ಕೊಹ್ಲಿ! ಇಲ್ಲಿದೆ ವಿಡಿಯೊ

Narendra modi
ದೇಶ4 hours ago

Narendra Modi: ಕಾಂಗ್ರೆಸ್‌ ಗೆದ್ದರೆ ಬುಲ್ಡೋಜರ್‌ನಿಂದ ರಾಮಮಂದಿರ ನೆಲಸಮ ಎಂದ ಮೋದಿ!

Sharmitha Gowda in bikini
ಕಿರುತೆರೆ7 months ago

Geetha Serial Kannada: ನಿದ್ದೆ ಕದ್ದ ಚೋರಿ! ನಟಿ `ಭಾನುಮತಿ’ ಹಾಟ್‌ ಪೋಟೊಗಳಿಗೆ ಫ್ಯಾನ್ಸ್ ಫುಲ್ ಫಿದಾ

Kannada Serials
ಕಿರುತೆರೆ7 months ago

Kannada Serials TRP: 2ನೇ ಸ್ಥಾನದಲ್ಲಿ 2 ಧಾರಾವಾಹಿಗಳು; ಟಿಆರ್‌ಪಿ ರೇಸ್‌ನಲ್ಲಿಲ್ಲ ಭಾಗ್ಯಲಕ್ಷ್ಮೀ!

Bigg Boss- Saregamapa 20 average TRP
ಕಿರುತೆರೆ7 months ago

Kannada Serials TRP: ಏಳನೇ ಸ್ಥಾನಕ್ಕೆ ʻಅಮೃತಧಾರೆʼ ಕುಸಿತ; ಬಿಗ್‌ ಬಾಸ್‌-ಸರಿಗಮಪ ಟಿಆರ್‌ಪಿ ಎಷ್ಟು?

galipata neetu
ಕಿರುತೆರೆ6 months ago

Kanyadana Serial: ಕಿರುತೆರೆಗೆ ಮತ್ತೆ ಎಂಟ್ರಿ ಕೊಟ್ಟ ʻಗಾಳಿಪಟʼ ಖ್ಯಾತಿಯ ʻನೀತುʼ!

Kannada Serials
ಕಿರುತೆರೆ8 months ago

Kannada Serials TRP: ನಾಲ್ಕನೇ ಸ್ಥಾನಕ್ಕೆ ಕುಸಿತ ಕಂಡ ʻಸೀತಾ ರಾಮʼ; ಟಿಆರ್‌ಪಿ ರೇಸ್‌ಗೆ ʻಭಾಗ್ಯಲಕ್ಷ್ಮಿʼ ಬ್ಯಾಕ್‌!

Kannada Serials
ಕಿರುತೆರೆ7 months ago

Kannada Serials TRP: ಟಿಆರ್‌ಪಿಯಲ್ಲಿ ʻಭಾಗ್ಯಲಕ್ಷ್ಮೀʼ ಹವಾ; ʻಪುಟ್ಟಕ್ಕನ ಮಕ್ಕಳುʼ ಧಾರಾವಾಹಿಗೆ ಸಂಕಷ್ಟ!

Bigg Boss' dominates TRP; Sita Rama fell to the sixth position
ಕಿರುತೆರೆ7 months ago

Kannada Serials TRP: ಟಿಆರ್‌ಪಿಯಲ್ಲಿ ʻಬಿಗ್ ಬಾಸ್ʼದೇ ಮೇಲುಗೈ; 6ನೇ ಸ್ಥಾನಕ್ಕೆ ಕುಸಿದ ʻಸೀತಾ ರಾಮʼ

geetha serial Dhanush gowda engagement
ಕಿರುತೆರೆ5 months ago

Dhanush Gowda: ಗೀತಾ ಧಾರಾವಾಹಿ ನಟನ ನಿಶ್ಚಿತಾರ್ಥ; ಭವ್ಯಾಳ ಕಮೆಂಟ್‌ ಬಾಕ್ಸ್‌ ಆಫ್‌!

varun
ಕಿರುತೆರೆ6 months ago

Brindavana Serial: ʼಬೃಂದಾವನʼ ಧಾರಾವಾಹಿಯಲ್ಲಿ ದೊಡ್ಡ ಟ್ವಿಸ್ಟ್‌; ಪ್ರಮುಖ ಪಾತ್ರಧಾರಿಯೇ ಬದಲು

Kannada Serials
ಕಿರುತೆರೆ8 months ago

Kannada Serials TRP: ಟಿಆರ್‌ಪಿಯಲ್ಲಿ ಏರಿಕೆ ಕಂಡ ʻಅಮೃತಧಾರೆʼ; ʻಗಟ್ಟಿಮೇಳʼಕ್ಕೆ ನಾಲ್ಕನೇ ಸ್ಥಾನ!

Prajwal Revanna Case JDS calls CD Shivakumar pen drive gang
ರಾಜಕೀಯ6 hours ago

Prajwal Revanna Case: CD ಶಿವಕುಮಾರ್ ಪೆನ್ ಡ್ರೈವ್ ಗ್ಯಾಂಗ್ ಎಂದ ಕುಟುಕಿದ ಜೆಡಿಎಸ್‌!

Karnataka weather Forecast
ಮಳೆ20 hours ago

Karnataka Weather : ಮೈಸೂರು, ಮಂಡ್ಯ ಸೇರಿ ಈ 7 ಜಿಲ್ಲೆಗಳಲ್ಲಿ ವ್ಯಾಪಕ ಮಳೆ ಸಂಭವ

Dina Bhavishya
ಭವಿಷ್ಯ21 hours ago

Dina Bhavishya : ಈ ರಾಶಿಯ ಪ್ರೇಮಿಗಳಿಗೆ ಮನೆಯಿಂದ ಸಿಗುತ್ತೆ ಗ್ರೀನ್‌ ಸಿಗ್ನಲ್‌

Karnataka Weather Forecast
ಮಳೆ1 day ago

Karnataka Weather : ಭಾರಿ ಮಳೆಗೆ ಕೊಟ್ಟೂರು ಬಸ್ ಸ್ಟ್ಯಾಂಡ್‌ ಜಲಾವೃತ; ‌ ತಾಯಿ-ಮಗ ಗ್ರೇಟ್‌ ಎಸ್ಕೇಪ್‌

Drowned in water
ಹಾಸನ2 days ago

Drowned in water : ಕೆರೆಯಲ್ಲಿ ಈಜಲು ಹೋದ ನಾಲ್ವರು ನೀರುಪಾಲು; ಓರ್ವ ಬಾಲಕ ಪಾರು

Suspicious Case
ಬೆಂಗಳೂರು2 days ago

Suspicious Case : ಬಾತ್‌ ರೂಂನಲ್ಲಿತ್ತು ಕಾಲೇಜು ಹುಡುಗಿ ಡೆಡ್‌ ಬಾಡಿ; ಕುತ್ತಿಗೆ ಕೊಯ್ದು ಸಾಯಿಸಿದವರು ಯಾರು?

Prajwal Revanna Case
ಕರ್ನಾಟಕ3 days ago

Prajwal Revanna Case: ಪ್ರಜ್ವಲ್‌ ರೇವಣ್ಣ ಇಂದೇ ಜರ್ಮನಿಯಿಂದ ಭಾರತಕ್ಕೆ? ಎಸ್‌ಐಟಿ ಅಲರ್ಟ್‌

Dina Bhavishya
ಭವಿಷ್ಯ3 days ago

Dina Bhavishya : ಭೂ ವ್ಯವಹಾರಕ್ಕೆ ಇದು ಸೂಕ್ತ ಸಮಯ; ವ್ಯಾಪಾರದಲ್ಲಿ ಡಬಲ್‌ ಲಾಭ

HD Revanna Released first reaction after release will be acquitted of all charges
ರಾಜಕೀಯ3 days ago

HD Revanna Released: ರಿಲೀಸ್‌ ಬಳಿಕ ರೇವಣ್ಣ ಫಸ್ಟ್‌ ರಿಯಾಕ್ಷನ್;‌ ನ್ಯಾಯಾಂಗದ ಮೇಲೆ ನಂಬಿಕೆ ಇದೆ; ಆರೋಪ ಮುಕ್ತನಾಗುವೆ

CM Siddaramaiah says Our government is stable for 5 years BJP will disintegrate
Lok Sabha Election 20243 days ago

CM Siddaramaiah: ನಮ್ಮ ಸರ್ಕಾರ 5 ವರ್ಷ ಸುಭದ್ರ; ಚುನಾವಣೆ ಬಳಿಕ ಬಿಜೆಪಿ ಛಿದ್ರ ಎಂದ ಸಿಎಂ ಸಿದ್ದರಾಮಯ್ಯ!

ಟ್ರೆಂಡಿಂಗ್‌