Humanity by police : ಕ್ಯಾನ್ಸರ್‌ಪೀಡಿತ ಬಾಲಕನ IPS ಕನಸು ನನಸು ಮಾಡಿದ ಪೊಲೀಸರು - Vistara News

ಬೆಂಗಳೂರು

Humanity by police : ಕ್ಯಾನ್ಸರ್‌ಪೀಡಿತ ಬಾಲಕನ IPS ಕನಸು ನನಸು ಮಾಡಿದ ಪೊಲೀಸರು

Humanity by police : 10 ವರ್ಷದ ಬಾಲಕ ಮಲ್ಲಿಕಾರ್ಜುನ್‌ ಸಣ್ಣ ವಯಸ್ಸಿನಿಂದಲೇ ಐಪಿಎಸ್ ಮಾಡುವ ಕನಸು ಹೊಂದಿದ್ದ. ಪೊಲೀಸರು ಆತನ ಆಸೆಯನ್ನು ಈಡೇರಿಸಿದ್ದಾನೆ.

VISTARANEWS.COM


on

Police-for-a-day
ಮಹತ್ವದ, ಕುತೂಹಲಕರ ಸುದ್ದಿಗಾಗಿ ಫಾಲೊ ಮಾಡಿ
Koo

ಬೆಂಗಳೂರು: ಪೊಲೀಸರು ಎಂದರೆ ತುಂಬ ಕಟ್ಟುನಿಟ್ಟು, ಸದಾ ಕಾಲ ಮುಖ ಗಂಟಿಕ್ಕಿಕೊಂಡಿರುತ್ತಾರೆ ಎನ್ನುವುದು ಸಾಮಾನ್ಯ ನಂಬಿಕೆ. ಆದರೆ ಇತ್ತೀಚಿನ ದಿನಗಳಲ್ಲಿ ಅವರ ಮಾನವೀಯ ಮುಖಗಳಿಗೂ ಪ್ರಚಾರ ಸಿಗುತ್ತಿದೆ. ಹೀಗಾಗಿ ಅವರೊಳಗಿನ ಮಾನವೀಯ ಸ್ಪಂದನೆಗಳೂ (Humanity by Police) ಹೊರ ಜಗತ್ತಿಗೆ ಗೊತ್ತಾಗುತ್ತಿದೆ. ಬೆಂಗಳೂರು ಪೊಲೀಸರು (Bangalore police) 10 ವರ್ಷದ ಪುಟ್ಟ ಬಾಲಕನೊಬ್ಬನ ಕನಸು ನನಸು ಮಾಡುವ ಮೂಲಕ ತಮ್ಮ ಮತ್ತೊಂದು ಔದಾರ್ಯದ ಮುಖವನ್ನು ತೋರಿಸಿದ್ದಾರೆ.

ಬಾಲಕನ ಕನಸು ಈಡೇರಿಸಿ ಮಾನವೀಯತೆ ಮೆರೆದದ್ದು ಬೆಂಗಳೂರು ಉತ್ತರ ವಿಭಾಗದ ಪೊಲೀಸರು. ಕ್ಯಾನ್ಸರ್‌ನಿಂದ (Cancer patient Child) ಬಳಲುತ್ತಿದ್ದ 10 ವರ್ಷದ ಬಾಲಕ ಮಲ್ಲಿಕಾರ್ಜುನ್‌ (10 year old Mallikarjun) ಎಂಬ ಹುಡುಗನ ಆಸೆಯನ್ನು ಈಡೇರಿಸಿದ್ದಾರೆ.

Police-for-a-day1

10 ವರ್ಷದ ಬಾಲಕ ಮಲ್ಲಿಕಾರ್ಜುನ್‌ ಸಣ್ಣ ವಯಸ್ಸಿನಿಂದಲೇ ಐಪಿಎಸ್ ಮಾಡುವ ಕನಸು ಹೊಂದಿದ್ದ. ಆದರೆ, ಸಣ್ಣ ವಯಸ್ಸಿನಲ್ಲೇ ಹುಡುಗನಿಗೆ ಕ್ಯಾನ್ಸರ್‌ ವಕ್ಕರಿಸಿದೆ. ಹೀಗಾಗಿ ಕ್ಯಾನ್ಸರ್‌ನಿಂದಾಗಿ ಕಿದ್ವಾಯಿ ಆಸ್ಪತ್ರೆಯಲ್ಲಿ ಚಿಕಿತ್ಸೆ ಪಡೆಯುತ್ತಿದ್ದಾನೆ.

ಐಪಿಎಸ್‌ ಅಧಿಕಾರಿಯಾಗುವ ಕನಸಿನ ಈ ಬಾಲಕನನ್ನು ಒಂದು ದಿನದ ಮಟ್ಟಿಗೆ ಪೊಲೀಸ್‌ ಅಧಿಕಾರಿಯ ದಿರಸಿನಲ್ಲಿ ಕಚೇರಿಯಲ್ಲಿ ಕೂರಿಸಿ ಆತನ ಆಸೆಯನ್ನು ಪೂರೈಸಿದ್ದಾರೆ.

Police-for-a-day

ಬೆಂಗಳೂರು ಪೊಲೀಸ್ ಪರಿಹಾರ ಸಂಸ್ಥೆ ಹಾಗೂ ಕಿದ್ವಾಯಿ ಸಹಯೋಗದಿಂದ ಬಾಲಕನ ಕನಸು ಸಾಕಾರಗೊಂಡಿದೆ. ಬೆಂಗಳೂರಿನ ಉತ್ತರ ವಿಭಾಗದ ಡಿಸಿಪಿ ಕಚೇರಿಯಲ್ಲಿ ನಡೆದ ಕಾರ್ಯಕ್ರಮದಲ್ಲಿ ಬೆಂಗಳೂರು ದಕ್ಷಿಣ ವಿಭಾಗದ ಡಿಸಿಪಿ ಸೈದುಲು ಅಡಾವತ್ ಬಾಲಕನಿಗೆ ಪೊಲೀಸ್ ಗೌರವ ನೀಡಿದರು.

ಬಾಲಕ ಮಲ್ಲಿಕಾರ್ಜುನ್‌ಗೆ ಸಮವಸ್ತ್ರ ತೊಡಿಸಿ, ತಲೆಗೆ ಕ್ಯಾಪ್‌ ಹಾಕಿಸಿ, ಕೈಯಲ್ಲಿ ಬೆತ್ತ ಕೊಟ್ಟು ಗೌರವಪೂರ್ವಕವಾಗಿ ಅವನನ್ನು ಕರೆತಂದು ಕುರ್ಚಿಯಲ್ಲಿ ಕೂರಿಸಿದರು. ಮಲ್ಲಿಕಾರ್ಜುನ್‌ ಪೊಲೀಸ್‌ ಕುರ್ಚಿಯಲ್ಲಿ ಕುಳಿತರೆ ಅಧಿಕಾರಿಗಳು ಅವನ ಮುಂದೆ ಕುಳಿತರು. ಮುಗ್ಧ ಮಗುವಾಗಿರುವ ಮಲ್ಲಿಕಾರ್ಜುನ್‌ ಈ ಗೌರವದಿಂದ ತನಗೆ ಖುಷಿಯಾಗಿದೆ ಎಂದು ಹೇಳಿ ಸಂಭ್ರಮಿಸಿದ. ನಿನ್ನ ಪೊಲೀಸ್‌ ಕನಸು ನನಸಾಗಲಿ ಎಂದು ಅಲ್ಲಿದ್ದ ಇತರ ಅಧಿಕಾರಿಗಳು ಹಾರೈಸಿದರು.

Police for a day21

ಇದನ್ನೂ ಓದಿ : Viral News : ಪೊಲೀಸರು ದಂಡ ಹಾಕಿದ್ದಕ್ಕೆ ಆಟೋ ರಿಕ್ಷಾಕ್ಕೇ ಬೆಂಕಿ ಹಚ್ಚಲು ಮುಂದಾದ ಚಾಲಕ!

13 ವರ್ಷದ ಬಾಲಕ ಕೂಡಾ ಪೊಲೀಸ್‌ ಆಫೀಸರ್‌ ಆಗಿದ್ದ!

ಕೆಲವೇ ದಿನಗಳ ಹಿಂದೆ ಕೂಡಾ ಬೆಂಗಳೂರು ಸಿಟಿ ಪೊಲೀಸರು 13 ವರ್ಷದ ಮೊಹ್ಸಿನಾ ರಾಜಾ ಎಂಬ ಬಾಲಕನಿಗೆ ಇದೇ ರೀತಿಯ ಪೊಲೀಸ್‌ ಗೌರವವನ್ನು ನೀಡಲಾಗಿತ್ತು. ಅರೀತಾ ಪರಿಹಾರ ಕೇಂದ್ರ ಮತ್ತು ಕಿದ್ವಾಯಿ ಆಸ್ಪತ್ರೆಯ ಅಧಿಕಾರಿಗಳ ಸಹಕಾರದಿಂದ ಈ ಗೌರವ ನೀಡಲಾಯಿತು.

ಈ ಕ್ಯಾನ್ಸರ್‌ ಪೀಡಿತ ಬಾಲಕನ ವಿಷಯವನ್ನು ಬೆಂಗಳೂರು ದಕ್ಷಿಣದ ಡಿಸಿಪಿ ಶಿವಪ್ರಕಾಶ್‌ ಅವರಿಗೆ ತಿಳಿಸಿದಾಗ ಅವರು ಕೂಡಲೇ ಮಗುವನ್ನು ಪೊಲೀಸ್‌ ಸ್ಟೇಷನ್‌ಗೆ ಕರೆಸಿ ಗೌರವ ನೀಡಿದರು. ಮಾತ್ರವಲ್ಲ, ಕಾನೂನು ಮತ್ತು ಸುವ್ಯವಸ್ಥೆಯ ವರದಿಯನ್ನೂ ಸಲ್ಲಿಸಿದರು.

ಕ್ಷಣ ಕ್ಷಣದ ಮಾಹಿತಿಗಾಗಿ Vistara News FaceBook ಪೇಜ್ ಫಾಲೋ ಮಾಡಿ
ಮಹತ್ವದ ಮಾಹಿತಿಗಾಗಿ ವಿಸ್ತಾರ ನ್ಯೂಸ್ ಆ್ಯಪ್ ಉಚಿತವಾಗಿ ಡೌನ್ ಲೋಡ್ ಮಾಡಿಕೊಳ್ಳಿ: Andriod App | IOS App
Continue Reading
Click to comment

Leave a Reply

Your email address will not be published. Required fields are marked *

ಮಳೆ

Karnataka Weather : ಭಾರಿ ಮಳೆ ಹಿನ್ನೆಲೆ ದಕ್ಷಿಣ ಕನ್ನಡಕ್ಕೆ ರೆಡ್ ಅಲರ್ಟ್; ಶುಕ್ರವಾರವೂ ಶಾಲೆಗಳಿಗೆ ರಜೆ ಘೋಷಣೆ

Karnataka Weather : ಗುಡುಗು ಸಹಿತ ಭಾರಿ ಮಳೆ ಹಿನ್ನೆಲೆಯಲ್ಲಿ ದಕ್ಷಿಣ ಕನ್ನಡಕ್ಕೆ ರೆಡ್ ಅಲರ್ಟ್ ಘೋಷಣೆ ಮಾಡಲಾಗಿದ್ದು, ಶುಕ್ರವಾರವೂ ಶಾಲೆಗಳಿಗೆ ರಜೆ ಘೋಷಣೆ ಮಾಡಲಾಗಿದೆ. ದಕ್ಷಿಣಕನ್ನಡ ಜಿಲ್ಲಾಧಿಕಾರಿ ಮುಲ್ಲೈ ಮುಗಿಲನ್ ಆದೇಶ ಹೊರಡಿಸಿದ್ದಾರೆ.

VISTARANEWS.COM


on

By

Karnataka Weather Forecast
Koo

ಮಂಗಳೂರು/ಬೆಂಗಳೂರು: ದಕ್ಷಿಣ ಕನ್ನಡ ಜಿಲ್ಲೆಯಾದ್ಯಂತ ನಿರಂತರ ಮಳೆ (Rain news) ಸುರಿಯುತ್ತಿರುವ ಹಿನ್ನೆಲೆ ಜೂ.28ರಂದು ಎಲ್ಲಾ ಪ್ರಾಥಮಿಕ-ಪ್ರೌಢಶಾಲೆಗಳಿಗೆ ರಜೆ ಘೋಷಣೆ (Karnataka weather Forecast) ಮಾಡಲಾಗಿದೆ. ದಕ್ಷಿಣಕನ್ನಡ ಜಿಲ್ಲಾಧಿಕಾರಿ ಮುಲ್ಲೈ ಮುಗಿಲನ್ ಆದೇಶ ಹೊರಡಿಸಿದ್ದಾರೆ. ಅಂಗನವಾಡಿ, ಪ್ರಾಥಮಿಕ, ಪ್ರೌಢಶಾಲೆಗಳಿಗೆ ರಜೆ ಘೋಷಣೆ ಮಾಡಲಾಗಿದೆ. ಮೀನುಗಾರರು ಸಮುದ್ರಕ್ಕೆ ಇಳಿಯದಂತೆ ಸೂಚನೆ ನೀಡಲಾಗಿದೆ. ನದಿ ಮತ್ತು ಸಮುದ್ರ ತೀರದ ಜನರಿಗೆ ಎಚ್ಚರ ವಹಿಸುವಂತೆ ತಿಳಿಸಲಾಗಿದೆ.

ನಿರಂತರ ಗಾಳಿಯೊಂದಿಗೆ ಭಾರಿ ಮಳೆ ಎಚ್ಚರ

ಕರಾವಳಿ ಭಾಗದಲ್ಲಿ ಅಲ್ಲಲ್ಲಿ ಭಾರೀ ಮಳೆಯೊಂದಿಗೆ 40-50ಕಿ.ಮೀ ವೇಗದಲ್ಲಿ ನಿರಂತರ ಗಾಳಿ ಬೀಸುವ ಸಾಧ್ಯತೆ ಇದೆ. ಶಿವಮೊಗ್ಗ, ಚಿಕ್ಕಮಗಳೂರು ಮತ್ತು ಕೊಡಗು ಜಿಲ್ಲೆಗಳಲ್ಲಿ ಪ್ರತ್ಯೇಕವಾಗಿ ವ್ಯಾಪಕ ಮಳೆಯಾದರೆ, ಕರ್ನಾಟಕದ ಒಳನಾಡಿನ ಉಳಿದ ಜಿಲ್ಲೆಗಳಲ್ಲಿ ಕೆಲವು ಸ್ಥಳಗಳಲ್ಲಿ ಹಗುರದಿಂದ ಸಾಧಾರಣ ಮಳೆಯಾಗುವ ಸಾಧ್ಯತೆ ಇದೆ ಎಂದು ಹವಾಮಾನ ಇಲಾಖೆ ಮುನ್ಸೂಚನೆಯನ್ನು ನೀಡಿದೆ. ಬೆಂಗಳೂರಿನಲ್ಲಿ ಸಾಮಾನ್ಯವಾಗಿ ಮೋಡ ಕವಿದ ವಾತಾವರಣ ಇರಲಿದೆ. ಹಗುರದಿಂದ ಸಾಧಾರಣ ಮಳೆಯಾಗುವ ಸಾಧ್ಯತೆ ಇದ್ದು, ರಭಸವಾಗಿ ಗಾಳಿ ಬೀಸಲಿದೆ.

ಕಾರವಾರದಲ್ಲಿ ಕಾಟೇಜ್‌ಗಳು ನೆಲಸಮ

ಭಾರಿ ಗಾಳಿ ಮಳೆಗೆ ಉತ್ತರಕನ್ನಡ ಜಿಲ್ಲೆಯ ಕಾರವಾರದ ದೇವಭಾಗದಲ್ಲಿ ಕಡಲಕೊರೆತ ಜೋರಾಗಿದೆ. ಜಂಗಲ್ ಲಾಡ್ಜಸ್‌‌ಗೆ ಸೇರಿದ ದೇವಭಾಗ ಬೀಚ್ ರೆಸಾರ್ಟ್ಸ್‌ನ 4 ಕಾಟೇಜ್‌ಗಳಿಗೆ ಹಾನಿಯಾಗಿದೆ. 18 ಕಾಟೇಜ್‌ಗಳಿದ್ದ ದೇವಭಾಗ್ ಬೀಚ್ ರೆಸಾರ್ಟ್‌ನಲ್ಲಿ ಮೂರ್ನಾಲ್ಕು ದಿನಗಳ ಅಂತರದಲ್ಲೇ 4 ಕಾಟೇಜ್‌ಗಳು ನೆಲಸಮವಾಗಿದೆ. ದಡಕ್ಕೆ ಅಪ್ಪಳಿಸುತ್ತಿರುವ ಆಳೆತ್ತರದ ಅಲೆಗಳಿಂದಾಗಿ ಕಾಟೇಜ್‌ಗಳು ಸಮುದ್ರಪಾಲಾದ ಪರಿಣಾಮ 1 ಕೋಟಿಗೂ ಅಧಿಕ ಹಾನಿಯಾಗಿದೆ. ಕಡಲ ತೀರಪ್ರದೇಶಕ್ಕೆ ಹೊಂದಿಕೊಂಡಿದ್ದ ಕಾಟೇಜ್‌ಗಳಿಗೆ ಹಾನಿಯಾಗಿದ್ದು, ಅರಣ್ಯ ಇಲಾಖೆಯ ನೂರಾರು ಮರಗಳು ನೆಲಕ್ಕುರುಳಿವೆ.

ಹೆದ್ದಾರಿಯಲ್ಲಿ ಗುಡ್ಡ ಕುಸಿತ

ಉತ್ತರಕನ್ನಡ ಜಿಲ್ಲೆಯ ಹೊನ್ನಾವರ ತಾಲೂಕಿನ ರಾಷ್ಟ್ರೀಯ ಹೆದ್ದಾರಿ 206ರ ಭಾಸ್ಕೇರಿ ಬಳಿ ಬುಧವಾರ ರಾತ್ರಿ ಗುಡ್ಡ ಕುಸಿದಿತ್ತು. ಗುಡ್ಡ ಕುಸಿತದಿಂದ ಹೊನ್ನಾವರ ಬೆಂಗಳೂರು ನಡುವಿನ ಸಂಚಾರ ಅಸ್ತವ್ಯಸ್ಥವಾಗಿತ್ತು. ಇದೀಗ ಸ್ಥಳೀಯರ ಸಹಾಯದಿಂದ ಗುಡ್ಡದ ಮಣ್ಣನ್ನು ತಾಲೂಕು ಆಡಳಿತ ತೆರವು ಮಾಡಿದೆ.

ಕೊಡಗಿನಲ್ಲಿ ಕುಸಿದು ಬಿದ್ದ ತಡೆಗೋಡೆ

ಕೊಡಗು ಜಿಲ್ಲೆಯಲ್ಲಿ ವರುಣಾರ್ಭಟ ಮುಂದುವರಿದಿದ್ದು, ಬುಧವಾರ ಸುರಿದ ಗಾಳಿ‌ ಮಳೆಗೆ ತಡರಾತ್ರಿ ತಡೆಗೋಡೆ ಕುಸಿದಿದೆ. ಮಡಿಕೇರಿಯ ತ್ಯಾಗರಾಜ ಕಾಲೋನಿಯಲ್ಲಿ ಘಟನೆ ನಡೆದಿದೆ. ಮನೆಗಳ ರಕ್ಷಣೆಗಾಗಿ ನಿರ್ಮಿಸಿದ ತಡೆಗೋಡೆ ಕುಸಿದ ಹಿನ್ನೆಲೆಯಲ್ಲಿ ಹಿಂಬದಿಯ ಮನೆಗಳಿಗೆ ಅಪಾಯ ಕಾಡುತ್ತಿದೆ. ತಡೆಗೋಡೆ ಕುಸಿತ ಹಿನ್ನೆಲೆಯಲ್ಲಿ ಮನೆಯ ಮುಂಭಾಗಕ್ಕೆ ಟಾರ್ಪಲ್ ಹೊದಿಕೆ ಹಾಕಲಾಗಿದೆ. ಸ್ಥಳಕ್ಕೆ ಮಡಿಕೇರಿ ನಗರಸಭೆಯ ಸಿಬ್ಬಂದಿ ಭೇಟಿ ನೀಡಿ ಪರಿಶೀಲನೆ ನಡೆಸಿದ್ದಾರೆ.

ಕೊಡಗು ಜಿಲ್ಲೆಯ ಸಂಪಾಜೆ ಸಮೀಪದ ಕೊಯ್ನಾಡಿನಲ್ಲಿ ಭಾರಿ ಗಾಳಿ ಮಳೆಗೆ ಶಾಲಾ ಕೊಠಡಿಯ ಮೇಲೆ ಗುಡ್ಡ ಕುಸಿದಿದೆ. ಶಾಲಾ ಕೊಠಡಿಯ ಮೇಲೆ ಗುಡ್ಡ ಕುಸಿದು ಗೋಡೆ, ಕಿಟಕಿ ಜಖಂಗೊಂಡಿದೆ. ಶಾಲೆಗೆ ರಜೆ ಇದ್ದಿದ್ದರಿಂದ ಅನಾಹುತ ತಪ್ಪಿದೆ. ಸುಮಾರು 80 ವಿದ್ಯಾರ್ಥಿಗಳು ವಿದ್ಯಾಭ್ಯಾಸ ಮಾಡುತ್ತಿರುವ ಸರ್ಕಾರಿ ಪ್ರೌಢ ಶಾಲೆಯಲ್ಲಿ ಕಳೆದ ಬಾರಿ ಮಳೆಗಾಲದಲ್ಲಿ ಇದೇ ಸಮಸ್ಯೆ ಎದುರಾಗಿತ್ತು.

ಮಳೆ ನಿಂತರೂ ನಿಲ್ಲದ ನೆರೆಹಾವಳಿ

ಉಡುಪಿ ನಗರದ ಹಲವೆಡೆ ಮಳೆ ನಿಂತರೂ ನೆರೆಹಾವಳಿ ಕಡಿಮೆ ಆಗಿಲ್ಲ. ಮೂಡನಿಡಂಬೂರು ಪರಿಸರದಲ್ಲಿ ನೀರಿನ ಮಟ್ಟ ಹೆಚ್ಚಿದೆ. ಅವೈಜ್ಞಾನಿಕ ಕಾಮಗಾರಿಯಿಂದ ಮನೆ ದೇವಾಲಯಗಳಿಗೆ ನೀರು ನುಗ್ಗಿದೆ. ದೈವಾರಾದನೆ ನಡೆಯುವ ಮೂಡನಿಡಂಬೂರು ಗರಡಿಯು ಜಲಾವೃತಗೊಂಡಿದೆ.

ಉಡುಪಿ ಜಿಲ್ಲೆಯಲ್ಲಿ ಎರಡು ದಿನಗಳಿಂದ ಸುರಿದ ಭಾರಿ ಮಳೆ ಹಿನ್ನೆಲೆ ವಿಶ್ವ ಪ್ರಸಿದ್ಧ ಮರವಂತೆ ಬೀಚ್ ಬಳಿ ಸಮುದ್ರದ ರುದ್ರನರ್ತನ ಜೋರಾಗಿದೆ. ತೀರದಲ್ಲಿ ಹಾಕಲಾಗಿರುವ ಟೆಟ್ರಾ ಪಾರ್ಟ್ಸ್ ಗೆ ಬಂದು ಅಲೆಗಳು ಬಡಿಯುತ್ತಿದೆ. ಮುನ್ನೆಚ್ಚರಿಕಾ ಕ್ರಮವಾಗಿ ಮೀನುಗಾರರು, ಪ್ರವಾಸಿಗರು ಕಡಲಿಗೆ ಇಳಿಯದಂತೆ ಸೂಚನೆ ನೀಡಲಾಗಿದೆ.

ಉಡುಪಿಯ ಕಲ್ಸಂಕದ ಹೋಟೆಲ್- ಲಾಡ್ಜ್ ಗೆ ಮಳೆ ನೀರು ನುಗ್ಗಿದ್ದು, ಎರಡು ಪಂಪ್ ಇಟ್ಟು ನೀರು ಖಾಲಿ ಮಾಡಲಾಗಿದೆ. ಕೃಷ್ಣಮಠ, ಕಲ್ಸಂಕ, ಬೈಲಕೆರೆ ಭಾಗದ ಕೆಲ ಮನೆ ಕಟ್ಟಡಗಳಿಗೆ ನೀರು ನುಗ್ಗಿದೆ. ಲಾಡ್ಜ್, ಹೋಟೆಲ್‌ನ ಬೇಸ್ ಮೆಂಟ್‌ಗೆ ನೀರು ನುಗ್ಗಿ ಅವಾಂತರವೇ ಸೃಷ್ಟಿಯಾಗಿದೆ. ಇಂದ್ರಾಣಿ ನದಿ ತುಂಬಿ ಹರಿದ ಪರಿಣಾಮ ಸುತ್ತಮುತ್ತ ಜಲಾವೃತಗೊಂಡಿದೆ.

ಉಡುಪಿ ಜಿಲ್ಲೆಯ ಬೈಂದೂರು ಪಟ್ಟಣ ಪಂಚಾಯತ್ ಬಳಿ ಕೃತಕ ನೆರೆ ಸೃಷ್ಟಿಯಾಗಿದೆ. ಯಡ್ತರೆ ಗ್ರಾಮದ ಬಂಕೇಶ್ವರ ಅಂಗನವಾಡಿ ಕೇಂದ್ರಕ್ಕೆ ನೀರು ನುಗಿದ್ದು, ಮಕ್ಕಳಿಗೆ ರಜೆ ಘೋಷಿಸಲಾಗಿದೆ. ಬೈಂದೂರು ಶಾಸಕ ಗುರುರಾಜ್ ಗಂಟಿಹೊಳೆ ಭೇಟಿ ನೀಡಿ, ಪಟ್ಟಣಪಂಚಾಯತ್ ಅಧಿಕಾರಿಗಳನ್ನು ಸ್ಥಳಕ್ಕೆ ಕರೆಸಿ ತರಾಟೆಗೆ ತೆಗೆದುಕೊಂಡರು. ಅಂಗನವಾಡಿಯ ಆಹಾರ ಸಾಮಾಗ್ರಿ ದಾಸ್ತಾನ ನೀರುಲಾಗಿತ್ತು. ಎರಡು ದಿನದಲ್ಲಿ ಒಳಚರಂಡಿ ವ್ಯವಸ್ಥೆ ಸರಿಪಡಿಸುವಂತೆ ಸೂಚನೆ ನೀಡಲಾಗಿದೆ.

Continue Reading

ಕರ್ನಾಟಕ

Bitcoin Scam: ಬಿಟ್‌ಕಾಯಿನ್‌ ಕೇಸ್; ಪೊಲೀಸರ ಮೇಲೆ ಜೀಪ್‌ ಹತ್ತಿಸಿದ್ದ DySP ಶ್ರೀಧರ್‌ ಪೂಜಾರ್‌ಗೆ ಜಾಮೀನು!

Bitcoin Scam: ಬಿಟ್‌ಕಾಯಿನ್‌ ಪ್ರಕರಣದ ಕುರಿತು ತನಿಖೆ ನಡೆಸುತ್ತಿದ್ದ ಸಿಸಿಬಿ ತಂಡದಲ್ಲಿ ಶ್ರೀಧರ್‌ ಪೂಜಾರ್‌ ಅವರು ಕೂಡ ಇದ್ದರು. ಬಿಟ್‌ಕಾಯಿನ್‌ ಪ್ರಕರಣದ ಆರೋಪಿಗಳನ್ನು ತಮ್ಮ ವಶದಲ್ಲಿ ಇರಿಸಿಕೊಂಡು ಹ್ಯಾಕಿಂಗ್‌, ಪಾಸ್‌ವರ್ಡ್‌ ಬದಲಾವಣೆ, ಬಿಟ್‌ಕಾಯಿನ್‌ ವರ್ಗಾವಣೆ ಸೇರಿ ಹಲವು ಅಕ್ರಮ ಎಸಗಿರುವ ಕುರಿತು ಶ್ರೀಧರ್‌ ಪೂಜಾರ್‌ ವಿರುದ್ಧ ಆರೋಪಿಗಳು ಕೇಳಿಬಂದಿದ್ದವು. ಈಗ ಹೈಕೋರ್ಟ್‌ ಅವರಿಗೆ ನಿರೀಕ್ಷಣಾ ಜಾಮೀನು ಮಂಜೂರು ಮಾಡಿದೆ.

VISTARANEWS.COM


on

Bitcoin Scam
Koo

ಬೆಂಗಳೂರು: ರಾಜ್ಯದಲ್ಲಿ ನಡೆದ ಬಿಟ್‌ಕಾಯಿನ್‌ ಹಗರಣಕ್ಕೆ (Bitcoin Scam) ಸಂಬಂಧಿಸಿದಂತೆ ಡಿವೈಎಸ್‌ಪಿ ಶ್ರೀಧರ್‌ ಪೂಜಾರ್‌ (Sridhar Pujar) ಅವರಿಗೆ ಹೈಕೋರ್ಟ್‌ (Karnataka High Court) ನಿರೀಕ್ಷಣಾ ಜಾಮೀನು ಮಂಜೂರು ಮಾಡಿದೆ. ಶ್ರೀಧರ್‌ ಪೂಜಾರ್‌ ಪರ ವಾದ ಮಂಡಿಸಿದ ಹಿರಿಯ ವಕೀಲ ಅರುಣ್‌ ಶ್ಯಾಮ್‌, “ಪೊಲೀಸರು ತಮ್ಮ ಪ್ರತಿಷ್ಠೆಗಾಗಿ ಕೇಸ್‌ ದಾಖಲಿಸಿದ್ದಾರೆ. ಪ್ರಕರಣ ನಡೆದ 4 ವರ್ಷಗಳ ನಂತರ ಬಂಧಿಸಲು ಯತ್ನಿಸಿದ್ದಾರೆ. ಒಂದೇ ಕೇಸ್‌ಗೆ ಎರಡೆರಡು ಬಾರಿ ಎಫ್‌ಐಆರ್‌ ದಾಖಲಿಸಿ, ತನಿಖೆ ನಡೆಸಿದ್ದಾರೆ” ಎಂದು ಹೇಳಿದರು. ಪೊಲೀಸರ ಕ್ರಮಕ್ಕೆ ಹೈಕೋರ್ಟ್‌ ನ್ಯಾಯಮೂರ್ತಿ ಎಂ.ಜಿ. ಉಮಾ ಅಸಮಾಧಾನ ವ್ಯಕ್ತಪಡಿಸಿದರು. “ಜನರನ್ನು ಮೂರ್ಖರನ್ನಾಗಿಸಲು ಪೊಲೀಸರು ಯತ್ನಿಸಿದಂತಿದೆ” ಎಂದ ಅವರು, ನಿರೀಕ್ಷಣಾ ಜಾಮೀನು ಮಂಜೂರು ಮಾಡಿದರು.

ಬಿಟ್‌ಕಾಯಿನ್‌ ಪ್ರಕರಣದ ಕುರಿತು ತನಿಖೆ ನಡೆಸುತ್ತಿದ್ದ ಸಿಸಿಬಿ ತಂಡದಲ್ಲಿ ಶ್ರೀಧರ್‌ ಪೂಜಾರ್‌ ಅವರು ಕೂಡ ಇದ್ದರು. ಬಿಟ್‌ಕಾಯಿನ್‌ ಪ್ರಕರಣದ ಆರೋಪಿಗಳನ್ನು ತಮ್ಮ ವಶದಲ್ಲಿ ಇರಿಸಿಕೊಂಡು ಹ್ಯಾಕಿಂಗ್‌, ಪಾಸ್‌ವರ್ಡ್‌ ಬದಲಾವಣೆ, ಬಿಟ್‌ಕಾಯಿನ್‌ ವರ್ಗಾವಣೆ ಸೇರಿ ಹಲವು ಅಕ್ರಮ ಎಸಗಿರುವ ಕುರಿತು ಶ್ರೀಧರ್‌ ಪೂಜಾರ್‌ ವಿರುದ್ಧ ಆರೋಪಿಗಳು ಕೇಳಿಬಂದಿದ್ದವು. ಅದರಂತೆ, ಎಸ್‌ಐಟಿ ಅಧಿಕಾರಿಗಳು ಪ್ರಕರಣ ದಾಖಲಿಸಿಕೊಂಡು ಕಳೆದ ಪೆಬ್ರವರಿಯಲ್ಲಿ ಶ್ರೀಧರ್‌ ಪೂಜಾರ್‌ ಅವರನ್ನು ಬಂಧಿಸಲು ತೆರಳಿದ್ದರು. ಇದೇ ವೇಳೆ, ಪೊಲೀಸರ ಮೇಲೆಯೇ ಕಾರು ಹತ್ತಿಸಲು ಯತ್ನಿಸಿದ್ದ ಶ್ರೀಧರ್‌ ಪೂಜಾರ್‌, ಪರಾರಿಯಾಗಿದ್ದರು.

Karnataka High court

ಏನಿದು ಬಿಟ್‌ ಕಾಯಿನ್‌ ಹಗರಣ?

ನವೆಂಬರ್ 2020ರಲ್ಲಿ, ಬೆಂಗಳೂರಿನ ಕೇಂದ್ರ ಅಪರಾಧ ವಿಭಾಗದ ಪೊಲೀಸರು ಶ್ರೀಕೃಷ್ಣ ಮತ್ತು ಅವರ ಸಹಚರರನ್ನು ಮಾದಕ ದ್ರವ್ಯ ಪ್ರಕರಣದಲ್ಲಿ ಬಂಧಿಸಿದರು. ಶ್ರೀಕಿ ಅವರು ಡಾರ್ಕ್‌ನೆಟ್ ಮೂಲಕ ಬಿಟ್‌ಕಾಯಿನ್‌ಗಳನ್ನು ಬಳಸಿಕೊಂಡು ಡ್ರಗ್‌ಗಳನ್ನು ಸಂಗ್ರಹಿಸಿದ್ದಾರೆ ಮತ್ತು ಅದನ್ನು ತಮ್ಮ ಹೈ ಪ್ರೊಫೈಲ್ ಕ್ಲೈಂಟ್‌ಗಳಿಗೆ ಮಾರಾಟ ಮಾಡಿದ್ದಾರೆ ಎಂಬ ವಿಷಯ ಹೊರಬಂದಿತ್ತು. ಶ್ರೀಕಿ 2019ರಲ್ಲಿ ಕರ್ನಾಟಕ ಸರ್ಕಾರದ ಇ-ಪ್ರೊಕ್ಯೂರ್‌ಮೆಂಟ್ ಪೋರ್ಟಲ್‌ನಲ್ಲಿ ನಡೆದ ಹ್ಯಾಕಿಂಗ್‌ನಲ್ಲಿ ಭಾಗಿಯಾಗಿದ್ದ ಎಂಬ ಆರೋಪವಿದೆ.

2019ರ ಜುಲೈನಲ್ಲಿ 7.37 ಕೋಟಿ ಅನಧಿಕೃತ ನಿಧಿ ವರ್ಗಾವಣೆ ಬೆಳಕಿಗೆ ಬಂದಿತ್ತು. ಶ್ರೀಕೃಷ್ಣ ಅಲಿಯಾಸ್ ಶ್ರೀಕಿ ಎಂಬ ಹ್ಯಾಕರ್ ಕರ್ನಾಟಕ ಸರ್ಕಾರದ ಇ-ಆಡಳಿತ ಕೇಂದ್ರದ ಪೋರ್ಟಲ್ ಅನ್ನು ಹ್ಯಾಕ್ ಮಾಡಿದ್ದಾನೆ ಮತ್ತು 10.5 ಕೋಟಿ ರೂಪಾಯಿ ಮತ್ತು 1.05 ಕೋಟಿ ರೂಪಾಯಿಗಳ ಹಣವನ್ನು ಬ್ಯಾಂಕ್ NGO, M/s. ಉದಯ್ ಗ್ರಾಮ ವಿಕಾಸ ಸಂಸ್ಥೆ, ನಾಗ್‌ಪುರ ಮತ್ತು ಮಾಲೀಕತ್ವ, M/s. ನಿಮ್ಮಿ ಎಂಟರ್‌ಪ್ರೈಸಸ್, ಬುಲಂದ್‌ಶಹರ್, ಉತ್ತರ ಪ್ರದೇಶ ಹೀಗೆ ವಿವರ ಇರುವ ಬ್ಯಾಂಕ್ ಖಾತೆಗಳಿಗೆ ವರ್ಗಾವಣೆ ಮಾಡಿ ಅವರಿಂದ ನಗದು ಪಡೆದಿದ್ದ ಎಂದು ಹೇಳಲಾಗಿದೆ.

ಇದನ್ನೂ ಓದಿ: Actor Darshan: ಪರಪ್ಪನ ಅಗ್ರಹಾರದಿಂದ‌ ದರ್ಶನ್ ಬೇರೆ ಜೈಲಿಗೆ ಶಿಫ್ಟ್?

Continue Reading

ಪ್ರಮುಖ ಸುದ್ದಿ

Murder of Renukaswamy : ದರ್ಶನ್​ ಗ್ಯಾಂಗ್​ನಿಂದ ಕೊಲೆಯಾದ ರೇಣುಕಾ ಸ್ವಾಮಿ ಬಗ್ಗೆ ವಿಕಿಪೀಡಿಯಾ ಪೇಜ್​

Murder of Renukaswamy: ಪ್ರಕರಣದ ತನಿಖೆ ಇನ್ನೂ ನಡೆಯುತ್ತಿದೆ. ಈ ಘಟನೆಯು ಕರ್ನಾಟಕ ಚಲನಚಿತ್ರೋದ್ಯಮ ಸೇರಿದಂತೆ ದೇಶಾದ್ಯಂತ ಆಘಾತಗಳನ್ನು ಉಂಟುಮಾಡಿತು ಮತ್ತು ಸಾಮಾಜಿಕ ಮಾಧ್ಯಮದ ವಿಷಕಾರಿ ಬದಿಯ ಪ್ರಶ್ನೆಯನ್ನು ಹುಟ್ಟುಹಾಕಿತು. ಎಂದು ಪೇಜ್​ನಲ್ಲಿ ಬರೆಯಲಾಗಿದೆ.

VISTARANEWS.COM


on

Murder of Renukaswamy
Koo

ಬೆಂಗಳೂರು: ನಟ ದರ್ಶನ್​ ಗ್ಯಾಂಗ್​ನಿಂದ ಕೊಲೆಯಾದ ರೇಣುಕಾಸ್ವಾಮಿ ಬಗ್ಗೆ ವಿಕೀಪಿಡಿಯಾ ಪೇಜೊಂದು ಸೃಷ್ಟಿಯಾಗಿದೆ. ಹಲವಾರು ಸುದ್ದಿಗಳನ್ನು ಮೂಲಗಳನ್ನು ಬಳಸಿಕೊಂಡು ಪೇಜ್​ ಸೃಷ್ಟಿ ಮಾಡಲಾಗಿದೆ. ರೇಣುಕಾ ಸ್ವಾಮಿ ಕೊಲೆ (Murder of Renukaswamy) ಎಂಬ ಪೇಜ್ ತೆರೆಯಲಾಗಿದೆ.

ರೇಣುಕಾಸ್ವಾಮಿ (1991- ಜೂನ್ 8, 2024) ಚಿತ್ರದುರ್ಗದ ನಿವಾಸಿಯಾಗಿದ್ದು, ದರ್ಶನ್ ಅವರ ದೀರ್ಘಕಾಲದ ಸಂಗಾತಿ ಪವಿತ್ರಾ ಗೌಡ ಅವರಿಗೆ ಅಶ್ಲೀಲ ಸಂದೇಶಗಳನ್ನು ಕಳುಹಿಸಿದ ನಂತರ ಕನ್ನಡ ನಟ ದರ್ಶನ್ ಅವರೊಂದಿಗೆ ಕೆಲಸ ಮಾಡುವ ವ್ಯಕ್ತಿಗಳು ಅಪಹರಿಸಿ ಕೊಲೆ ಮಾಡಿದ್ದಾರೆ ಎಂದು ಆರೋಪಿಸಲಾಗಿದೆ. ಪ್ರಕರಣದ ತನಿಖೆ ಇನ್ನೂ ನಡೆಯುತ್ತಿದೆ. ಈ ಘಟನೆಯು ಕರ್ನಾಟಕ ಚಲನಚಿತ್ರೋದ್ಯಮ ಸೇರಿದಂತೆ ದೇಶಾದ್ಯಂತ ಆಘಾತಗಳನ್ನು ಉಂಟುಮಾಡಿತು ಮತ್ತು ಸಾಮಾಜಿಕ ಮಾಧ್ಯಮದ ವಿಷಕಾರಿ ಬದಿಯ ಪ್ರಶ್ನೆಯನ್ನು ಹುಟ್ಟುಹಾಕಿತು. ಎಂದು ಪೇಜ್​ನಲ್ಲಿ ಬರೆಯಲಾಗಿದೆ.

ರೇಣುಕಾಸ್ವಾಮಿ ಅವರು ಕಾಶಿನಾಥ ಶಿವನಗೌಡರ ಮತ್ತು ರತ್ನಪ್ರಭಾ ದಂಪತಿಯ ಏಕೈಕ ಪುತ್ರ. ಅವರು ಕುಟುಂಬದ ಏಕೈಕ ಆದಾಯ ಗಳಿಸುವವರಾಗಿದ್ದರು ಮತ್ತು 2023 ರಲ್ಲಿ ವಿವಾಹವಾದರು. ಕೊಲೆಯ ಸಮಯದಲ್ಲಿ, ಅವರ ಪತ್ನಿ ತಮ್ಮ ಮೊದಲ ಮಗುವಿಗೆ ಗರ್ಭಿಣಿಯಾಗಿದ್ದರು ಮತ್ತು ರೇಣುಕಾಸ್ವಾಮಿ ಕೊಲೆ ನಡೆದ ಫಾರ್ಮಸಿ ಅಂಗಡಿಯಲ್ಲಿ ಕೆಲಸ ಮಾಡುತ್ತಿದ್ದರು. ದರ್ಶನ್ ಸ್ನೇಹಿತೆ ಪವಿತ್ರಾ ಗೌಡ ಅವರಿಗೆ ರೇಣುಕಾಸ್ವಾಮಿ ಅಶ್ಲೀಲ ಸಂದೇಶಗಳನ್ನು ಕಳುಹಿಸಿದ್ದಾರೆ ಎಂದು ಆರೋಪಿಸಲಾಗಿದೆ ಎಂದು ವಿಕಿಯಲ್ಲಿ ಮಾಹಿತಿ ಹಾಕಲಾಗಿದೆ.

ನಟಿ ಪವಿತ್ರಾ ಗೌಡ ಅವರಿಗೆ ಸ್ವಾಮಿ ಅಶ್ಲೀಲ ಸಂದೇಶಗಳನ್ನು ಕಳುಹಿಸಿದ್ದಾರೆ ಎಂದು ಆರೋಪಿಸಲಾಗಿದೆ, ಏಕೆಂದರೆ ದರ್ಶನ್ ಅವರು ತಮ್ಮ ಪತ್ನಿ ವಿಜಯಲಕ್ಷ್ಮಿ ಅವರನ್ನು ಮದುವೆಯಾಗಿದ್ದರೂ ಸಹ 2024 ರ ಜನವರಿಯಲ್ಲಿ ಗೌಡರೊಂದಿಗಿನ ಸಂಬಂಧದ ಬಗ್ಗೆ ವಿವಾದವನ್ನು ದೃಢಪಡಿಸಿದರು ಎಂಬುದಾಗಿ ವಿಕಿ ಪೇಜ್​ನಲ್ಲಿ ಬರೆಯಲಾಗಿದೆ.

ಇದನ್ನೂ ಓದಿ: Namma Metro : ಮೆಟ್ರೊ ಕಾಮಗಾರಿ ಎಫೆಕ್ಟ್​​, ಬೆಂಗಳೂರಿನ ರಸ್ತೆ ಮಧ್ಯೆ ಸೃಷ್ಟಿಯಾಯ್ತು ದೊಡ್ಡ ಹೊಂಡ!

2024ರ ಜೂನ್ 7ರಂದು ರೇಣುಕಾಸ್ವಾಮಿಯನ್ನು ದರ್ಶನ್ ಸಹಚರ ರಘು ಅಪಹರಿಸಿದ್ದ. ಕೆಲವು ವರದಿಗಳ ಪ್ರಕಾರ, ದರ್ಶನ್ ಸಂತ್ರಸ್ತನನ್ನು ಬೆಲ್ಟ್ ನಿಂದ ಹೊಡೆದರು ಮತ್ತು ಆರೋಪಿಸಲಾಗಿದೆ. ಅವರ ಕುಟುಂಬವು ಅನ್ನಪೂರ್ಣೇಶ್ವರಿ ನಗರ ಪೊಲೀಸ್ ಠಾಣೆಯಲ್ಲಿ ಕಾಣೆಯಾದ ಬಗ್ಗೆ ದೂರು ನೀಡಿತು. ಜೂನ್ 9, 2024 ರಂದು, ದರ್ಶನ್ ತಮ್ಮ ಇತ್ತೀಚಿನ ಚಿತ್ರ “ಡೆವಿಲ್: ದಿ ಹೀರೋ” ಸೆಟ್​​ನಲ್ಲಿದ್ದಾಗ ಪವಿತ್ರಾ ಗೌಡ ಅವರೊಂದಿಗೆ ವಿಚಾರಣೆಗೆ ಕರೆದೊಯ್ಯಲಾಗಿತ್ತು.

ಸ್ವಾಮಿಯನ್ನು ಕೋಲುಗಳಿಂದ ಥಳಿಸಿ ವಿದ್ಯುತ್ ಆಘಾತಗಳನ್ನು ನೀಡಲಾಗುತ್ತು. ಈ ವೇಳೆ ಪವಿತ್ರಾ ಗೌಡ ಸ್ವಲ್ಪ ಸಮಯದವರೆಗೆ ಶೆಡ್ ನಲ್ಲಿದ್ದರು ಎಂದು ಪೊಲೀಸರು ತಿಳಿಸಿದ್ದಾರೆ. ಸುದ್ದಿ ಸಂಸ್ಥೆ ಪಿಟಿಐ ಪ್ರಕಾರ, ತೂಗುದೀಪ ಅವರು ಮಾಡಿದ ಪೋಸ್ಟ್​ಗಳಿಗೆ ಸ್ವಾಮಿಯನ್ನು ಶಿಕ್ಷಿಸಲು ಶ್ರೀ ತೂಗುದೀಪ ಅವರನ್ನು ಪ್ರಚೋದಿಸಿದ್ದು ಎಂ.ಎಸ್.ಗೌಡ ಎಂದು ಹೇಳಲಾಗಿದೆ. ಇದೇ ರೀತಿಯ ಹಲವಾರು ಮಾಹಿತಿಗಳ ನೀಡಲಾಗಿದೆ.

Continue Reading

ಮಳೆ

Karnataka Weather : ಭಾರಿ ಮಳೆಗೆ ಸೇತುವೆಯಿಂದ ಹೊಳೆಗೆ ಬಿದ್ದ ಕಾರು; ಮರ ಹಿಡಿದು ಪ್ರಾಣ ಉಳಿಸಿಕೊಂಡ ಸವಾರರು

Karnataka Weather Forecast : ಮಂಗಳೂರಲ್ಲಿ ಭಾರಿ ಮಳೆಗೆ (Rain News) ಸೇತುವೆಯಿಂದ ಹಾರಿ ಕಾರೊಂದು ಹೊಳೆಗೆ ಬಿದ್ದು, ಇಬ್ಬರು ಪವಾಡದಂತೆ ಪಾರಾಗಿದ್ದಾರೆ. ಇತ್ತ ಚಿಕ್ಕಮಗಳೂರಿನಲ್ಲಿ ಗಾಳಿ ಮಳೆಗೆ ತುಂಡಾಗಿ ಬಿದ್ದಿದ್ದ ವಿದ್ಯುತ್‌ ತಂತಿ ತುಳಿದು ಬಾಲಕನಿಗೆ ಶಾಕ್‌ ಹೊಡೆದಿದ್ದು, ಗಾಯಗೊಂಡಿದ್ದಾನೆ.

VISTARANEWS.COM


on

By

karnataka Weather Forecast
Koo

ಮಂಗಳೂರು/ಚಿಕ್ಕಮಗಳೂರು: ಕರಾವಳಿ ಭಾಗದಲ್ಲಿ ಭಾರೀ (Karnataka weather Forecast) ಮಳೆಯಾಗುತ್ತಿದ್ದು, ಅವಾಂತರವೇ ಸೃಷ್ಟಿಯಾಗಿದೆ. ಮಂಗಳೂರಿನ ಗಡಿಭಾಗ ಕಾಸರಗೋಡಿನಲ್ಲಿ ಕಾರೊಂದು ಹೊಳೆಗೆ ಬಿದ್ದಿದೆ. ಕಾರಿನಲ್ಲಿದ್ದ ಇಬ್ಬರ ರಕ್ಷಣೆ ಮಾಡಲಾಗಿದ್ದು, ಕಾರು ನೀರುಪಾಲಾಗಿದೆ. ಕಾಸರಗೋಡಿನ ಪಳ್ಳಂಜಿ-ಪಾಂಡ್ಯ ರಸ್ತೆಯಲ್ಲಿ ಘಟನೆ (Heavy rain) ನಡೆದಿದೆ.

ರಶೀದ್, ತಸ್ರೀಫ್ ಎಂಬುವವರು ಕಾರಿನಲ್ಲಿ ಬರುತ್ತಿದ್ದರು. ಈ ವೇಳೆ ತಡೆಬೇಲಿ ಇಲ್ಲದ ಕಾರಣ, ನಿಯಂತ್ರಣ ತಪ್ಪಿದ ಕಾರು ಸೇತುವೆಯಿಂದ ಹೊಳೆಗೆ ಬಿದ್ದಿದೆ. ತುಂಬಿ ಹರಿಯುತ್ತಿದ್ದ ಹೊಳೆಯಲ್ಲೇ ಮರವನ್ನು ಹಿಡಿದು ಇಬ್ಬರು ಪ್ರಾಣ ಉಳಿಸಿಕೊಂಡಿದ್ದಾರೆ.

ಬಾಲಕನಿಗೆ ಕರೆಂಟ್‌ ಶಾಕ್‌

ಗಾಳಿ ಮಳೆಗೆ ರಸ್ತೆಗೆ ತುಂಡಾಗಿ ಬಿದ್ದ ವಿದ್ಯುತ್ ತಂತಿಯನ್ನು ತುಳಿದ ಪರಿಣಾಮ ಬಾಲಕನಿಗೆ ಶಾಕ್‌ ಹೊಡೆದಿದೆ. ಚಿಕ್ಕಮಗಳೂರಿನ ಕೊಪ್ಪ ತಾಲೂಕಿನ ಎಚ್ ಹೊಸೂರು ಗ್ರಾಮದಲ್ಲಿ ಘಟನೆ ನಡೆದಿದೆ. ಎರಡನೇ ತರಗತಿ ವಿದ್ಯಾರ್ಥಿ ಶಾಲೆ ಮುಗಿಸಿ ಮನೆಗೆ ಹೋಗುತ್ತಿದ್ದ. ರಸ್ತೆಯಲ್ಲಿ ನಡೆದು ಹೋಗುತ್ತಿದ್ದಾಗಲೇ ಏಕಾಏಕಿ ವಿದ್ಯುತ್ ತಂತಿ ತುಂಡಾಗಿ ಬಿದ್ದಿದೆ. ಇದನ್ನೂ ಗಮನಿಸಿದೇ ವಿದ್ಯುತ್‌ ತಂತಿ ತುಳಿದು ಕೆಳಗೆ ಬಿದ್ದಿದ್ದಾನೆ. ಸದ್ಯ ಬಾಲಕನಿಗೆ ಕೈ, ಬೆನ್ನು, ಕಾಲಿಗೆ ಸಣ್ಣ ಪುಟ್ಟ ಗಾಯವಾಗಿದ್ದು ಪ್ರಾಣಪಾಯದಿಂದ ಪಾರಾಗಿದ್ದಾನೆ. ಮೆಸ್ಕಾಂ ಅಧಿಕಾರಿಗಳ ನಿರ್ಲಕ್ಷಕ್ಕೆ ಸ್ಥಳೀಯರು ಆಕ್ರೋಶ ಹೊರಹಾಕಿದ್ದಾರೆ. ಬಾಲಕನಿಗೆ ಕೊಪ್ಪ ಸಾರ್ವಜನಿಕ ಆಸ್ಪತ್ರೆಗೆ ದಾಖಲು ಮಾಡಲಾಗಿದೆ.

ಇದನ್ನೂ ಓದಿ: Karnataka Rain : ಧಾರಾಕಾರ ಮಳೆಗೆ ಸಡಿಲಗೊಂಡ ಗುಡ್ಡಗಳು; ಧರೆ ಕುಸಿದು ಮಣ್ಣಿನಡಿ ಸಿಲುಕಿದ ಇಬ್ಬರು ಮಕ್ಕಳು

ಕಾರವಾರದಲ್ಲಿ ಕಾಟೇಜ್‌ಗಳು ನೆಲಸಮ

ಭಾರಿ ಗಾಳಿ ಮಳೆಗೆ ಉತ್ತರಕನ್ನಡ ಜಿಲ್ಲೆಯ ಕಾರವಾರದ ದೇವಭಾಗದಲ್ಲಿ ಕಡಲಕೊರೆತ ಜೋರಾಗಿದೆ. ಜಂಗಲ್ ಲಾಡ್ಜಸ್‌‌ಗೆ ಸೇರಿದ ದೇವಭಾಗ ಬೀಚ್ ರೆಸಾರ್ಟ್ಸ್‌ನ 4 ಕಾಟೇಜ್‌ಗಳಿಗೆ ಹಾನಿಯಾಗಿದೆ. 18 ಕಾಟೇಜ್‌ಗಳಿದ್ದ ದೇವಭಾಗ್ ಬೀಚ್ ರೆಸಾರ್ಟ್‌ನಲ್ಲಿ ಮೂರ್ನಾಲ್ಕು ದಿನಗಳ ಅಂತರದಲ್ಲೇ 4 ಕಾಟೇಜ್‌ಗಳು ನೆಲಸಮವಾಗಿದೆ. ದಡಕ್ಕೆ ಅಪ್ಪಳಿಸುತ್ತಿರುವ ಆಳೆತ್ತರದ ಅಲೆಗಳಿಂದಾಗಿ ಕಾಟೇಜ್‌ಗಳು ಸಮುದ್ರಪಾಲಾದ ಪರಿಣಾಮ 1 ಕೋಟಿಗೂ ಅಧಿಕ ಹಾನಿಯಾಗಿದೆ. ಕಡಲ ತೀರಪ್ರದೇಶಕ್ಕೆ ಹೊಂದಿಕೊಂಡಿದ್ದ ಕಾಟೇಜ್‌ಗಳಿಗೆ ಹಾನಿಯಾಗಿದ್ದು, ಅರಣ್ಯ ಇಲಾಖೆಯ ನೂರಾರು ಮರಗಳು ನೆಲಕ್ಕುರುಳಿವೆ.

ಹೆದ್ದಾರಿಯಲ್ಲಿ ಗುಡ್ಡ ಕುಸಿತ

ಉತ್ತರಕನ್ನಡ ಜಿಲ್ಲೆಯ ಹೊನ್ನಾವರ ತಾಲೂಕಿನ ರಾಷ್ಟ್ರೀಯ ಹೆದ್ದಾರಿ 206ರ ಭಾಸ್ಕೇರಿ ಬಳಿ ಬುಧವಾರ ರಾತ್ರಿ ಗುಡ್ಡ ಕುಸಿದಿತ್ತು. ಗುಡ್ಡ ಕುಸಿತದಿಂದ ಹೊನ್ನಾವರ ಬೆಂಗಳೂರು ನಡುವಿನ ಸಂಚಾರ ಅಸ್ತವ್ಯಸ್ಥವಾಗಿತ್ತು. ಇದೀಗ ಸ್ಥಳೀಯರ ಸಹಾಯದಿಂದ ಗುಡ್ಡದ ಮಣ್ಣನ್ನು ತಾಲೂಕು ಆಡಳಿತ ತೆರವು ಮಾಡಿದೆ.

ಕೊಡಗಿನಲ್ಲಿ ಕುಸಿದು ಬಿದ್ದ ತಡೆಗೋಡೆ

ಕೊಡಗು ಜಿಲ್ಲೆಯಲ್ಲಿ ವರುಣಾರ್ಭಟ ಮುಂದುವರಿದಿದ್ದು, ಬುಧವಾರ ಸುರಿದ ಗಾಳಿ‌ ಮಳೆಗೆ ತಡರಾತ್ರಿ ತಡೆಗೋಡೆ ಕುಸಿದಿದೆ. ಮಡಿಕೇರಿಯ ತ್ಯಾಗರಾಜ ಕಾಲೋನಿಯಲ್ಲಿ ಘಟನೆ ನಡೆದಿದೆ. ಮನೆಗಳ ರಕ್ಷಣೆಗಾಗಿ ನಿರ್ಮಿಸಿದ ತಡೆಗೋಡೆ ಕುಸಿದ ಹಿನ್ನೆಲೆಯಲ್ಲಿ ಹಿಂಬದಿಯ ಮನೆಗಳಿಗೆ ಅಪಾಯ ಕಾಡುತ್ತಿದೆ. ತಡೆಗೋಡೆ ಕುಸಿತ ಹಿನ್ನೆಲೆಯಲ್ಲಿ ಮನೆಯ ಮುಂಭಾಗಕ್ಕೆ ಟಾರ್ಪಲ್ ಹೊದಿಕೆ ಹಾಕಲಾಗಿದೆ. ಸ್ಥಳಕ್ಕೆ ಮಡಿಕೇರಿ ನಗರಸಭೆಯ ಸಿಬ್ಬಂದಿ ಭೇಟಿ ನೀಡಿ ಪರಿಶೀಲನೆ ನಡೆಸಿದ್ದಾರೆ.

ಕೊಡಗು ಜಿಲ್ಲೆಯ ಸಂಪಾಜೆ ಸಮೀಪದ ಕೊಯ್ನಾಡಿನಲ್ಲಿ ಭಾರಿ ಗಾಳಿ ಮಳೆಗೆ ಶಾಲಾ ಕೊಠಡಿಯ ಮೇಲೆ ಗುಡ್ಡ ಕುಸಿದಿದೆ. ಶಾಲಾ ಕೊಠಡಿಯ ಮೇಲೆ ಗುಡ್ಡ ಕುಸಿದು ಗೋಡೆ, ಕಿಟಕಿ ಜಖಂಗೊಂಡಿದೆ. ಶಾಲೆಗೆ ರಜೆ ಇದ್ದಿದ್ದರಿಂದ ಅನಾಹುತ ತಪ್ಪಿದೆ. ಸುಮಾರು 80 ವಿದ್ಯಾರ್ಥಿಗಳು ವಿದ್ಯಾಭ್ಯಾಸ ಮಾಡುತ್ತಿರುವ ಸರ್ಕಾರಿ ಪ್ರೌಢ ಶಾಲೆಯಲ್ಲಿ ಕಳೆದ ಬಾರಿ ಮಳೆಗಾಲದಲ್ಲಿ ಇದೇ ಸಮಸ್ಯೆ ಎದುರಾಗಿತ್ತು.

ಮಳೆ ನಿಂತರೂ ನಿಲ್ಲದ ನೆರೆಹಾವಳಿ

ಉಡುಪಿ ನಗರದ ಹಲವೆಡೆ ಮಳೆ ನಿಂತರೂ ನೆರೆಹಾವಳಿ ಕಡಿಮೆ ಆಗಿಲ್ಲ. ಮೂಡನಿಡಂಬೂರು ಪರಿಸರದಲ್ಲಿ ನೀರಿನ ಮಟ್ಟ ಹೆಚ್ಚಿದೆ. ಅವೈಜ್ಞಾನಿಕ ಕಾಮಗಾರಿಯಿಂದ ಮನೆ ದೇವಾಲಯಗಳಿಗೆ ನೀರು ನುಗ್ಗಿದೆ. ದೈವಾರಾದನೆ ನಡೆಯುವ ಮೂಡನಿಡಂಬೂರು ಗರಡಿಯು ಜಲಾವೃತಗೊಂಡಿದೆ.

ಉಡುಪಿ ಜಿಲ್ಲೆಯಲ್ಲಿ ಎರಡು ದಿನಗಳಿಂದ ಸುರಿದ ಭಾರಿ ಮಳೆ ಹಿನ್ನೆಲೆ ವಿಶ್ವ ಪ್ರಸಿದ್ಧ ಮರವಂತೆ ಬೀಚ್ ಬಳಿ ಸಮುದ್ರದ ರುದ್ರನರ್ತನ ಜೋರಾಗಿದೆ. ತೀರದಲ್ಲಿ ಹಾಕಲಾಗಿರುವ ಟೆಟ್ರಾ ಪಾರ್ಟ್ಸ್ ಗೆ ಬಂದು ಅಲೆಗಳು ಬಡಿಯುತ್ತಿದೆ. ಮುನ್ನೆಚ್ಚರಿಕಾ ಕ್ರಮವಾಗಿ ಮೀನುಗಾರರು, ಪ್ರವಾಸಿಗರು ಕಡಲಿಗೆ ಇಳಿಯದಂತೆ ಸೂಚನೆ ನೀಡಲಾಗಿದೆ.

ಉಡುಪಿಯ ಕಲ್ಸಂಕದ ಹೋಟೆಲ್- ಲಾಡ್ಜ್ ಗೆ ಮಳೆ ನೀರು ನುಗ್ಗಿದ್ದು, ಎರಡು ಪಂಪ್ ಇಟ್ಟು ನೀರು ಖಾಲಿ ಮಾಡಲಾಗಿದೆ. ಕೃಷ್ಣಮಠ, ಕಲ್ಸಂಕ, ಬೈಲಕೆರೆ ಭಾಗದ ಕೆಲ ಮನೆ ಕಟ್ಟಡಗಳಿಗೆ ನೀರು ನುಗ್ಗಿದೆ. ಲಾಡ್ಜ್, ಹೋಟೆಲ್‌ನ ಬೇಸ್ ಮೆಂಟ್‌ಗೆ ನೀರು ನುಗ್ಗಿ ಅವಾಂತರವೇ ಸೃಷ್ಟಿಯಾಗಿದೆ. ಇಂದ್ರಾಣಿ ನದಿ ತುಂಬಿ ಹರಿದ ಪರಿಣಾಮ ಸುತ್ತಮುತ್ತ ಜಲಾವೃತಗೊಂಡಿದೆ.

ಉಡುಪಿ ಜಿಲ್ಲೆಯ ಬೈಂದೂರು ಪಟ್ಟಣ ಪಂಚಾಯತ್ ಬಳಿ ಕೃತಕ ನೆರೆ ಸೃಷ್ಟಿಯಾಗಿದೆ. ಯಡ್ತರೆ ಗ್ರಾಮದ ಬಂಕೇಶ್ವರ ಅಂಗನವಾಡಿ ಕೇಂದ್ರಕ್ಕೆ ನೀರು ನುಗಿದ್ದು, ಮಕ್ಕಳಿಗೆ ರಜೆ ಘೋಷಿಸಲಾಗಿದೆ. ಬೈಂದೂರು ಶಾಸಕ ಗುರುರಾಜ್ ಗಂಟಿಹೊಳೆ ಭೇಟಿ ನೀಡಿ, ಪಟ್ಟಣಪಂಚಾಯತ್ ಅಧಿಕಾರಿಗಳನ್ನು ಸ್ಥಳಕ್ಕೆ ಕರೆಸಿ ತರಾಟೆಗೆ ತೆಗೆದುಕೊಂಡರು. ಅಂಗನವಾಡಿಯ ಆಹಾರ ಸಾಮಾಗ್ರಿ ದಾಸ್ತಾನ ನೀರುಲಾಗಿತ್ತು. ಎರಡು ದಿನದಲ್ಲಿ ಒಳಚರಂಡಿ ವ್ಯವಸ್ಥೆ ಸರಿಪಡಿಸುವಂತೆ ಸೂಚನೆ ನೀಡಲಾಗಿದೆ.

ನಿರಂತರ ಗಾಳಿಯೊಂದಿಗೆ ಭಾರಿ ಮಳೆ ಎಚ್ಚರ

ಕರಾವಳಿ ಭಾಗದಲ್ಲಿ ಅಲ್ಲಲ್ಲಿ ಭಾರೀ ಮಳೆಯೊಂದಿಗೆ 40-50ಕಿ.ಮೀ ವೇಗದಲ್ಲಿ ನಿರಂತರ ಗಾಳಿ ಬೀಸುವ ಸಾಧ್ಯತೆ ಇದೆ. ಶಿವಮೊಗ್ಗ, ಚಿಕ್ಕಮಗಳೂರು ಮತ್ತು ಕೊಡಗು ಜಿಲ್ಲೆಗಳಲ್ಲಿ ಪ್ರತ್ಯೇಕವಾಗಿ ವ್ಯಾಪಕ ಮಳೆಯಾದರೆ, ಕರ್ನಾಟಕದ ಒಳನಾಡಿನ ಉಳಿದ ಜಿಲ್ಲೆಗಳಲ್ಲಿ ಕೆಲವು ಸ್ಥಳಗಳಲ್ಲಿ ಹಗುರದಿಂದ ಸಾಧಾರಣ ಮಳೆಯಾಗುವ ಸಾಧ್ಯತೆ ಇದೆ ಎಂದು ಹವಾಮಾನ ಇಲಾಖೆ ಮುನ್ಸೂಚನೆಯನ್ನು ನೀಡಿದೆ. ಬೆಂಗಳೂರಿನಲ್ಲಿ ಸಾಮಾನ್ಯವಾಗಿ ಮೋಡ ಕವಿದ ವಾತಾವರಣ ಇರಲಿದೆ. ಹಗುರದಿಂದ ಸಾಧಾರಣ ಮಳೆಯಾಗುವ ಸಾಧ್ಯತೆ ಇದ್ದು, ರಭಸವಾಗಿ ಗಾಳಿ ಬೀಸಲಿದೆ.

ಶಾಲೆಗಳಿಗೆ ರಜೆ ಘೋಷಣೆ

ದಕ್ಷಿಣ ಕನ್ನಡ ಜಿಲ್ಲೆಯಾದ್ಯಂತ ನಿರಂತರ ಮಳೆ ಸುರಿಯುತ್ತಿರುವ ಹಿನ್ನೆಲೆ ಜೂ.28ರಂದು ಎಲ್ಲಾ ಪ್ರಾಥಮಿಕ-ಪ್ರೌಢಶಾಲೆಗಳಿಗೆ ರಜೆ ಘೋಷಣೆ ಮಾಡಲಾಗಿದೆ. ದಕ್ಷಿಣಕನ್ನಡ ಜಿಲ್ಲಾಧಿಕಾರಿ ಮುಲ್ಲೈ ಮುಗಿಲನ್ ಆದೇಶ ಹೊರಡಿಸಿದ್ದಾರೆ. ಅಂಗನವಾಡಿ, ಪ್ರಾಥಮಿಕ, ಪ್ರೌಢಶಾಲೆಗಳಿಗೆ ರಜೆ ಘೋಷಣೆ ಮಾಡಲಾಗಿದೆ. ಮೀನುಗಾರರು ಸಮುದ್ರಕ್ಕೆ ಇಳಿಯದಂತೆ ಸೂಚನೆ ನೀಡಲಾಗಿದೆ. ನದಿ ಮತ್ತು ಸಮುದ್ರ ತೀರದ ಜನರಿಗೆ ಎಚ್ಚರ ವಹಿಸುವಂತೆ ತಿಳಿಸಲಾಗಿದೆ.

ಈ ಸಂಗತಿಯ ಕುರಿತು ನಿಮ್ಮ ಅನಿಸಿಕೆ ಏನು? ಕಾಮೆಂಟ್ ಮೂಲಕ ತಿಳಿಸಿ

Continue Reading
Advertisement
Paris Olympics 2024
ಕ್ರೀಡೆ4 mins ago

Paris Olympics 2024: ಒಲಿಂಪಿಕ್ಸ್​ಗೆ ಅರ್ಹತೆ ಪಡೆದ​ ರಾಜ್ಯದ ಇಬ್ಬರು ಸ್ವಿಮ್ಮರ್​ಗಳು

Illegal ganja storage in Ballari Arrest of two accused Rs 19 10 lakh Valuable ganja seized
ಕರ್ನಾಟಕ40 mins ago

Ballari News: ಬಳ್ಳಾರಿಯಲ್ಲಿ ಅಕ್ರಮ ಗಾಂಜಾ ಸಂಗ್ರಹ; ಇಬ್ಬರು ಆರೋಪಿಗಳ ಬಂಧನ

Arvind Kejriwal
ದೇಶ41 mins ago

Arvind Kejriwal: ಪ್ಯಾಂಟ್‌ ಲೂಸ್‌ ಆಗಿದೆ, ಒಂದು ಬೆಲ್ಟ್‌ ಕೊಡಿ; ಕೋರ್ಟ್‌ಗೆ ಅರವಿಂದ್‌ ಕೇಜ್ರಿವಾಲ್‌ ಮನವಿ‌

Karnataka Weather Forecast
ಮಳೆ43 mins ago

Karnataka Weather : ಭಾರಿ ಮಳೆ ಹಿನ್ನೆಲೆ ದಕ್ಷಿಣ ಕನ್ನಡಕ್ಕೆ ರೆಡ್ ಅಲರ್ಟ್; ಶುಕ್ರವಾರವೂ ಶಾಲೆಗಳಿಗೆ ರಜೆ ಘೋಷಣೆ

Railway New Rules
Latest44 mins ago

Railway New Rules: ರೈಲು ಪ್ರಯಾಣಿಕರೇ, ಬರ್ತ್‌ನಲ್ಲಿ ಮಲಗುವ ಕುರಿತ ಈ ಹೊಸ ರೂಲ್ಸ್‌ ನೆನಪಿನಲ್ಲಿರಲಿ!

Ashada Sale 2024
ಫ್ಯಾಷನ್50 mins ago

Ashada Sale 2024: ಆಷಾಢ ಸೇಲ್‌ನಲ್ಲಿ ಶಾಪಿಂಗ್‌ ಮಾಡುವಾಗ ಗಮನದಲ್ಲಿಟ್ಟುಕೊಳ್ಳಬೇಕಾದ 5 ಸಂಗತಿಗಳು

Fishermen Arrest
ದೇಶ2 hours ago

Fishermen Arrest: ಶ್ರೀಲಂಕಾ ನೌಕಾಪಡೆಯ ನಾವಿಕ ಸಾವು; 10 ಭಾರತೀಯ ಮೀನುಗಾರರ ವಿರುದ್ಧ ಕೇಸ್‌ ದಾಖಲು

IND vs ENG Semi Final
ಕ್ರೀಡೆ2 hours ago

IND vs ENG Semi Final: ಗಯಾನದಲ್ಲಿ ಭಾರೀ ಗಾಳಿ-ಮಳೆ ಶುರು; ರದ್ದಾಗುತ್ತಾ ಸೆಮಿಫೈನಲ್​ ಪಂದ್ಯ?

Bitcoin Scam
ಕರ್ನಾಟಕ2 hours ago

Bitcoin Scam: ಬಿಟ್‌ಕಾಯಿನ್‌ ಕೇಸ್; ಪೊಲೀಸರ ಮೇಲೆ ಜೀಪ್‌ ಹತ್ತಿಸಿದ್ದ DySP ಶ್ರೀಧರ್‌ ಪೂಜಾರ್‌ಗೆ ಜಾಮೀನು!

IND vs ENG
ಕ್ರೀಡೆ2 hours ago

IND vs ENG: ಸೆಮಿ ಪಂದ್ಯಕ್ಕೂ ಮುನ್ನ ಬಿಸಿಸಿಐ ವಿರುದ್ಧ ಗಂಭೀರ ಆರೋಪ ಮಾಡಿದ ಮಾಜಿ ನಾಯಕ

Sharmitha Gowda in bikini
ಕಿರುತೆರೆ9 months ago

Geetha Serial Kannada: ನಿದ್ದೆ ಕದ್ದ ಚೋರಿ! ನಟಿ `ಭಾನುಮತಿ’ ಹಾಟ್‌ ಪೋಟೊಗಳಿಗೆ ಫ್ಯಾನ್ಸ್ ಫುಲ್ ಫಿದಾ

Kannada Serials
ಕಿರುತೆರೆ9 months ago

Kannada Serials TRP: 2ನೇ ಸ್ಥಾನದಲ್ಲಿ 2 ಧಾರಾವಾಹಿಗಳು; ಟಿಆರ್‌ಪಿ ರೇಸ್‌ನಲ್ಲಿಲ್ಲ ಭಾಗ್ಯಲಕ್ಷ್ಮೀ!

Bigg Boss- Saregamapa 20 average TRP
ಕಿರುತೆರೆ8 months ago

Kannada Serials TRP: ಏಳನೇ ಸ್ಥಾನಕ್ಕೆ ʻಅಮೃತಧಾರೆʼ ಕುಸಿತ; ಬಿಗ್‌ ಬಾಸ್‌-ಸರಿಗಮಪ ಟಿಆರ್‌ಪಿ ಎಷ್ಟು?

galipata neetu
ಕಿರುತೆರೆ7 months ago

Kanyadana Serial: ಕಿರುತೆರೆಗೆ ಮತ್ತೆ ಎಂಟ್ರಿ ಕೊಟ್ಟ ʻಗಾಳಿಪಟʼ ಖ್ಯಾತಿಯ ʻನೀತುʼ!

Kannada Serials
ಕಿರುತೆರೆ9 months ago

Kannada Serials TRP: ನಾಲ್ಕನೇ ಸ್ಥಾನಕ್ಕೆ ಕುಸಿತ ಕಂಡ ʻಸೀತಾ ರಾಮʼ; ಟಿಆರ್‌ಪಿ ರೇಸ್‌ಗೆ ʻಭಾಗ್ಯಲಕ್ಷ್ಮಿʼ ಬ್ಯಾಕ್‌!

Kannada Serials
ಕಿರುತೆರೆ9 months ago

Kannada Serials TRP: ಟಿಆರ್‌ಪಿಯಲ್ಲಿ ʻಭಾಗ್ಯಲಕ್ಷ್ಮೀʼ ಹವಾ; ʻಪುಟ್ಟಕ್ಕನ ಮಕ್ಕಳುʼ ಧಾರಾವಾಹಿಗೆ ಸಂಕಷ್ಟ!

Bigg Boss' dominates TRP; Sita Rama fell to the sixth position
ಕಿರುತೆರೆ8 months ago

Kannada Serials TRP: ಟಿಆರ್‌ಪಿಯಲ್ಲಿ ʻಬಿಗ್ ಬಾಸ್ʼದೇ ಮೇಲುಗೈ; 6ನೇ ಸ್ಥಾನಕ್ಕೆ ಕುಸಿದ ʻಸೀತಾ ರಾಮʼ

geetha serial Dhanush gowda engagement
ಕಿರುತೆರೆ6 months ago

Dhanush Gowda: ಗೀತಾ ಧಾರಾವಾಹಿ ನಟನ ನಿಶ್ಚಿತಾರ್ಥ; ಭವ್ಯಾಳ ಕಮೆಂಟ್‌ ಬಾಕ್ಸ್‌ ಆಫ್‌!

varun
ಕಿರುತೆರೆ7 months ago

Brindavana Serial: ʼಬೃಂದಾವನʼ ಧಾರಾವಾಹಿಯಲ್ಲಿ ದೊಡ್ಡ ಟ್ವಿಸ್ಟ್‌; ಪ್ರಮುಖ ಪಾತ್ರಧಾರಿಯೇ ಬದಲು

Kannada Serials
ಕಿರುತೆರೆ10 months ago

Kannada Serials TRP: ಟಿಆರ್‌ಪಿಯಲ್ಲಿ ಏರಿಕೆ ಕಂಡ ʻಅಮೃತಧಾರೆʼ; ʻಗಟ್ಟಿಮೇಳʼಕ್ಕೆ ನಾಲ್ಕನೇ ಸ್ಥಾನ!

Karnataka Weather Forecast
ಮಳೆ43 mins ago

Karnataka Weather : ಭಾರಿ ಮಳೆ ಹಿನ್ನೆಲೆ ದಕ್ಷಿಣ ಕನ್ನಡಕ್ಕೆ ರೆಡ್ ಅಲರ್ಟ್; ಶುಕ್ರವಾರವೂ ಶಾಲೆಗಳಿಗೆ ರಜೆ ಘೋಷಣೆ

karnataka Weather Forecast
ಮಳೆ2 hours ago

Karnataka Weather : ಭಾರಿ ಮಳೆಗೆ ಸೇತುವೆಯಿಂದ ಹೊಳೆಗೆ ಬಿದ್ದ ಕಾರು; ಮರ ಹಿಡಿದು ಪ್ರಾಣ ಉಳಿಸಿಕೊಂಡ ಸವಾರರು

Heart Attack
ಕೊಡಗು4 hours ago

Heart Attack : ಕೊಡಗಿನಲ್ಲಿ ಹೃದಯಾಘಾತಕ್ಕೆ ಯುವತಿ ಬಲಿ; ಹೆಚ್ಚಾಯ್ತು ಅಲ್ಪಾಯುಷ್ಯದ ಭಯ

karnataka Rains Effected
ಮಳೆ8 hours ago

Karnataka Rain : ಧಾರಾಕಾರ ಮಳೆಗೆ ಸಡಿಲಗೊಂಡ ಗುಡ್ಡಗಳು; ಧರೆ ಕುಸಿದು ಮಣ್ಣಿನಡಿ ಸಿಲುಕಿದ ಇಬ್ಬರು ಮಕ್ಕಳು

karnataka Weather Forecast
ಮಳೆ3 days ago

Karnataka Weather : ಕರಾವಳಿಯಲ್ಲಿ ಮುಂದುವರಿದ ವರುಣಾರ್ಭಟ; ಸಾಂಪ್ರದಾಯಿಕ ಮೀನುಗಾರಿಕೆಗೂ ಬ್ರೇಕ್

karnataka weather Forecast
ಮಳೆ6 days ago

Karnataka Weather : ರಭಸವಾಗಿ ಹರಿಯುವ ನೀರಲ್ಲಿ ಸಿಲುಕಿದ ಬೊಲೆರೋ; ಬಿರುಗಾಳಿ ಸಹಿತ ಮಳೆ ಎಚ್ಚರಿಕೆ

International Yoga Day 2024
ಕರ್ನಾಟಕ6 days ago

International Yoga Day 2024: ಎಲ್ಲೆಲ್ಲೂ ಯೋಗಾಯೋಗ‌ಕ್ಕೆ ಮಂಡಿಯೂರಿದ ಜನತೆ

Karnataka Weather Forecast
ಮಳೆ1 week ago

Karnataka Weather : ಬಾಗಲಕೋಟೆ, ಬೆಂಗಳೂರು ಸೇರಿ ಚಿಕ್ಕಮಗಳೂರಲ್ಲಿ ಸುರಿದ ಗಾಳಿ ಸಹಿತ ಮಳೆ

Actor Darshan
ಮೈಸೂರು1 week ago

Actor Darshan : ಕೊಲೆ ಕೇಸ್‌ ಬೆನ್ನಲ್ಲೇ ನಟ ದರ್ಶನ್‌ ಸೇರಿ ಪತ್ನಿ ವಿಜಯಲಕ್ಷ್ಮಿಗೆ ಬಾರ್ ಹೆಡೆಡ್ ಗೂಸ್ ಸಂಕಷ್ಟ!

Bakrid 2024
ಬೆಂಗಳೂರು1 week ago

Bakrid 2024 : ಮತ್ತೊಂದು ಧರ್ಮವನ್ನೂ ಪ್ರೀತಿಸಿ; ಬಕ್ರೀದ್‌ ಪ್ರಾರ್ಥನೆಯಲ್ಲಿ ಸಿಎಂ ಸಿದ್ದರಾಮಯ್ಯ ಕರೆ

ಟ್ರೆಂಡಿಂಗ್‌