Naming Game : ಬದುಕಿರುವ ರಾಜಕಾರಣಿಗಳ ಹೆಸರನ್ನು ಕಟ್ಟಡ, ಪಾರ್ಕ್‌ಗೆ ಇಡಬಹುದೇ?; ಕೋರ್ಟ್‌ನಲ್ಲಿ ವಿಚಾರಣೆ - Vistara News

ಕೋರ್ಟ್

Naming Game : ಬದುಕಿರುವ ರಾಜಕಾರಣಿಗಳ ಹೆಸರನ್ನು ಕಟ್ಟಡ, ಪಾರ್ಕ್‌ಗೆ ಇಡಬಹುದೇ?; ಕೋರ್ಟ್‌ನಲ್ಲಿ ವಿಚಾರಣೆ

Naming Game : ದಾವಣಗೆರೆಯ ಹಲವು ಕಟ್ಟಡ, ಉದ್ಯಾನ, ಸಭಾಂಗಣಗಳಿಗೆ ಶಾಸಕರಾದ ಎಸ್‌.ಎಸ್‌. ಮಲ್ಲಿಕಾರ್ಜುನ್‌, ಶಾಮನೂರು ಶಿವಶಂಕರಪ್ಪ ಅವರ ಹೆಸರು ಇಟ್ಟಿರುವುದನ್ನು ಪ್ರಶ್ನಿಸಿದ ಅರ್ಜಿಯ ವಿಚಾರಣೆ ಹೈಕೋರ್ಟ್‌ನಲ್ಲಿ ಆರಂಭಗೊಂಡಿದೆ.

VISTARANEWS.COM


on

Naming Game Shamanur SS Mallikarjun
ಮಹತ್ವದ, ಕುತೂಹಲಕರ ಸುದ್ದಿಗಾಗಿ ಫಾಲೊ ಮಾಡಿ
Koo

ಬೆಂಗಳೂರು: ದೇಶದಲ್ಲಿ ಈ ಹಿಂದೆ ಆಡಳಿತ ನಡೆಸಿದ ರಾಜಕಾರಣಿಗಳ ಹೆಸರನ್ನು ಕಟ್ಟಡಗಳಿಗೆ, ಪಾರ್ಕ್‌ ಮತ್ತಿತರ ಸಾರ್ವಜನಿಕ ಸ್ಥಳಗಳಿಗೆ (Buildings and Public Places) ನೀಡುವುದು ಹಿಂದಿನಿಂದಲೂ ನಡೆದುಕೊಂಡು ಬಂದಿದೆ (Naming Game). ದೇಶದಲ್ಲಿ ಬಹುಪಾಲು ಪ್ರಮುಖ ಸಂಸ್ಥೆಗಳು ರಾಜಕಾರಣಿಗಳ ಹೆಸರಿನಲ್ಲಿ ಇರುವುದಕ್ಕೆ ಇದೇ ಕಾರಣ. ಹಾಗಿದ್ದರೆ ಇದು ಸರಿಯೇ ಎಂಬುದಕ್ಕೆ ಸಂಬಂಧಿಸಿ ಒಂದು ಕೋರ್ಟ್‌ ವಿಚಾರಣೆ (Karnataka High court) ಆರಂಭಗೊಂಡಿದೆ.

ಸರ್ಕಾರದ ಅನುದಾನದಲ್ಲಿ ನಿರ್ಮಿಸಲಾದ ಸರ್ಕಾರಿ ಕಟ್ಟಡ ಹಾಗೂ ಇನ್ನಿತರ ಸ್ಥಳಗಳಿಗೆ ಬದುಕಿರುವ ರಾಜಕಾರಣಿಗಳ ನಾಮಕರಣ ಮಾಡುವುದನ್ನು ಆಕ್ಷೇಪಿಸಿ ಸಲ್ಲಿಸಲಾದ ಅರ್ಜಿಗೆ ಸಂಬಂಧಿಸಿದಂತೆ ರಾಜ್ಯ ಹೈಕೋರ್ಟ್‌ನಲ್ಲಿ ವಿಚಾರಣೆ ಶುರುವಾಗಿದ್ದು ನೋಟಿಸ್‌ಗಳು ಜಾರಿಯಾಗಿವೆ.

ಈ ಪ್ರಕರಣದಲ್ಲಿ ರಾಜ್ಯದ ಹಾಲಿ ಸಚಿವರಾಗಿರುವ ಎಸ್‌ ಎಸ್‌ಮಲ್ಲಿಕಾರ್ಜುನ್ (SS Mallikarjun) ಹಾಗೂ ಶಾಸಕ ಶಾಮನೂರು ಶಿವಶಂಕರಪ್ಪ (Shamanur Shivashankarappa) ಅವರಿಗೆ ಕರ್ನಾಟಕ ಹೈಕೋರ್ಟ್‌ ಮಂಗಳವಾರ ನೋಟಿಸ್‌ ಜಾರಿಗೊಳಿಸಿದೆ. ಇದಕ್ಕೆ ಕಾರಣ ದಾವಣಗೆರೆಯ ಪುಣೆ-ಬೆಂಗಳೂರು ರಸ್ತೆಯಲ್ಲಿ ನಿರ್ಮಿಸಲಾಗಿರುವ ಹಳೆಯ ಬಸ್ ನಿಲ್ದಾಣಕ್ಕೆ ಶಾಮನೂರು ಶಿವಶಂಕರಪ್ಪ ಬಸ್ ನಿಲ್ದಾಣ ಎಂದು ಹೆಸರಿಟ್ಟಿರುವುದು. ದಾವಣಗೆರೆ ನಗರದ ಕುಡಿಯುವ ನೀರಿಗಾಗಿ ಬಳಸಲಾಗುತ್ತಿರುವ ಮತ್ತು ದಾವಣಗೆರೆ ಮಹಾನಗರ ಪಾಲಿಕೆ ವತಿಯಿಂದ ನಿರ್ಮಿಸಿ ನಿರ್ವಹಿಸಲಾಗುತ್ತಿರುವ ಕುಂದವಾಡ ಕೆರೆಯ ಹೆಸರನ್ನು ಎಸ್ ಎಸ್ ಮಲ್ಲಿಕಾರ್ಜುನ ಸಾಗರ ಎಂದು ಇರಿಸಿರುವುದು.

ಇಷ್ಟೇ ಅಲ್ಲ ಜಿಲ್ಲಾ ಪಂಚಾಯ್ತಿ ಸಭಾಂಗಣಕ್ಕೆ ಎಸ್ ಎಸ್ ಮಲ್ಲಿಕಾರ್ಜುನ ಸಭಾಂಗಣ ಎಂದೂ ಮಹಾನಗರ ಪಾಲಿಕೆಯ ಸಭಾಂಗಣಕ್ಕೆ ಡಾ. ಶಾಮನೂರು ಶಿವಶಂಕರಪ್ಪ ಸಭಾಂಗಣ ಎಂದೂ ನಾಮಕರಣ ಮಾಡಲಾಗಿದೆ. ನಗರದಲ್ಲಿನ ಪ್ರಮುಖ ಪಾರ್ಕ್‌ವೊಂದಕ್ಕೆ ಡಾ.ಶಾಮನೂರು ಶಿವಶಂಕರಪ್ಪ ಉದ್ಯಾನವನ ಎಂದು ಹೆಸರಿಡಲಾಗಿದೆ. ಹುಡ್ಕೊ ಬಡಾವಣೆಗೆ ಎಸ್‌ಎಸ್‌ಎಂ ನಗರ (ಎಸ್‌ ಎಸ್‌ ಮಲ್ಲಿಕಾರ್ಜುನ ನಗರ) ಎಂದು ಹೆಸರಿಡಲಾಗಿದೆ.

ಈ ರೀತಿ ಜೀವಂತ ಇರುವ ವ್ಯಕ್ತಿಗಳ ಹೆಸರನ್ನು ಇಡುವುದು ಹೈಕೋರ್ಟ್‌ ಈ ಹಿಂದೆ ನೀಡಿದ ಆದೇಶಗಳಿಗೆ ವಿರುದ್ಧವಾಗಿವೆ ಎಂದು ಹೈಕೋರ್ಟ್‌ನಲ್ಲಿ ಸಲ್ಲಿಸಿರುವ ಅರ್ಜಿಯಲ್ಲಿ ವಿವರಿಸಲಾಗಿದೆ.

ದಾವಣಗೆರೆಯ ವಕೀಲ ಎ ಸಿ ರಾಘವೇಂದ್ರ ಸಲ್ಲಿಸಿರುವ ಸಾರ್ವಜನಿಕ ಹಿತಾಸಕ್ತಿ ಅರ್ಜಿಯನ್ನು ಮುಖ್ಯ ನ್ಯಾಯಮೂರ್ತಿ ಎನ್‌ ವಿ ಅಂಜಾರಿಯಾ ಮತ್ತು ನ್ಯಾಯಮೂರ್ತಿ ಕೃಷ್ಣ ಎಸ್.ದೀಕ್ಷಿತ್ ಅವರ ನೇತೃತ್ವದ ವಿಭಾಗೀಯ ಪೀಠ ವಿಚಾರಣೆ ನಡೆಸಿತು.

ಇದನ್ನೂ ಓದಿ : Hookah Bar : ಹುಕ್ಕಾ, ಹುಕ್ಕಾಬಾರ್‌ ನಿಷೇಧಿಸಲು ರಾಜ್ಯ ಸರ್ಕಾರಕ್ಕೆ ಅಧಿಕಾರವಿಲ್ಲ? ತೀರ್ಪು ಕಾಯ್ದಿರಿಸಿದ ಕೋರ್ಟ್‌

ವಿಚಾರಣೆ ವೇಳೆ ಅರ್ಜಿದಾರರ ಪರ ವಕೀಲ ಎಂ ವಿನೋದ್ ಕುಮಾರ್ ಅವರು ದಾವಣಗೆರೆ ನಗರದ ವಿವಿಧೆಡೆ ಸರ್ಕಾರದ ಅನುದಾನದಲ್ಲಿ ನಿರ್ಮಿಸಲಾದ ಅನೇಕ ಕಟ್ಟಡಗಳು, ಪಾರ್ಕ್, ಬಸ್ ನಿಲ್ದಾಣ, ರಸ್ತೆಗಳಿಗೆ ಶಾಮನೂರು ಶಿವಶಂಕರಪ್ಪ ಹಾಗೂ ಎಸ್ ಎಸ್ ಮಲ್ಲಿಕಾರ್ಜುನ ಅವರ ಹೆಸರುಗಳನ್ನು ಇರಿಸಲಾಗಿದ್ದು ಇದನ್ನು ತೆರವುಗೊಳಿಸಲು ನಿರ್ದೇಶಿಸಬೇಕು ಎಂದು ಕೋರಿದರು.

ಚನ್ನಗಿರಿ ಕ್ಷೇತ್ರದ ಮಾಜಿ ಶಾಸಕ ಮಾಡಾಳ್‌ ವಿರೂಪಾಕ್ಷಪ್ಪ ಅವರ ಹೆಸರನ್ನು ತಾಲ್ಲೂಕು ಕ್ರೀಡಾಂಗಣಕ್ಕೆ ಇರಿಸಿದ್ದನ್ನು ಆಕ್ಷೇಪಿಸಲಾದ ಸಾರ್ವಜನಿಕ ಹಿತಾಸಕ್ತಿ ಅರ್ಜಿಯಲ್ಲಿ ಹೈಕೋರ್ಟ್ 2012ರಲ್ಲಿ ಆದೇಶ ನೀಡಿದ್ದು, ಮಾಡಾಳ್‌ ವಿರೂಪಾಕ್ಷಪ್ಪ ಆಟದ ಮೈದಾನ ಎಂಬುದರ ಬದಲಿಗೆ ತಾಲ್ಲೂಕು ಆಟದ ಮೈದಾನ ಎಂದು ನಾಮಕರಣ ಮಾಡಲಾಗಿತ್ತು ಎಂಬ ಅಂಶವನ್ನು ಪೀಠದ ಗಮನಕ್ಕೆ ತಂದರು.

ವಾದ ಆಲಿಸಿದ ಪೀಠವು ರಾಜ್ಯ ಸರ್ಕಾರದ ಪ್ರಧಾನ ಕಾರ್ಯದರ್ಶಿ, ದಾವಣಗೆರೆ ಜಿಲ್ಲಾಧಿಕಾರಿ, ಮಹಾನಗರ ಪಾಲಿಕೆ ಆಯುಕ್ತ, ಜಿಲ್ಲಾ ಪಂಚಾಯ್ತಿ ಸಿಇಒ ಸೇರಿದಂತೆ ಪ್ರಕರಣದ ಎಲ್ಲ ಪ್ರತಿವಾದಿಗಳಿಗೆ ನೋಟಿಸ್ ಜಾರಿಗೊಳಿಸಲು ಆದೇಶಿಸಿದೆ.

ಕ್ಷಣ ಕ್ಷಣದ ಮಾಹಿತಿಗಾಗಿ Vistara News FaceBook ಪೇಜ್ ಫಾಲೋ ಮಾಡಿ
ಮಹತ್ವದ ಮಾಹಿತಿಗಾಗಿ ವಿಸ್ತಾರ ನ್ಯೂಸ್ ಆ್ಯಪ್ ಉಚಿತವಾಗಿ ಡೌನ್ ಲೋಡ್ ಮಾಡಿಕೊಳ್ಳಿ: Andriod App | IOS App
Continue Reading
Click to comment

Leave a Reply

Your email address will not be published. Required fields are marked *

ಪ್ರಮುಖ ಸುದ್ದಿ

Cab Service : ಆ್ಯಪ್​ ಆಧಾರಿತ ಕ್ಯಾಬ್​ಗಳು ಶೇ. 5ಕ್ಕಿಂತ ಹೆಚ್ಚು ಸೇವಾ ಶುಲ್ಕ ವಿಧಿಸುವಂತಿಲ್ಲ; ಸರ್ಕಾರದ ಆದೇಶಕ್ಕೆ ಕೋರ್ಟ್​ ಮನ್ನಣೆ

Cab Service: ನ್ಯಾಯಾಲಯವು ಆದೇಶದಲ್ಲಿ. ರಿಟ್ ಅರ್ಜಿಗಳನ್ನು ವಜಾಗೊಳಿಸಲಾಗಿದೆ. ಕ್ಯಾಬ್ ಸಂಸ್ಥೆಗಳು ಈಗ ನಿಗದಿಪಡಿಸಿದ ಶೇಕಡಾ 5 ಸೇವಾ ಶುಲ್ಕ ಸಂಗ್ರಹಿಸಲು ಮಾತ್ರ ಅರ್ಹರಾಗಿರುತ್ತಾರೆ ಎಂದು ಸ್ಪಷ್ಟಪಡಿಸಲಾಗಿದೆ. ಅಪ್ಲಿಕೇಶನ್ ಆಧಾರಿತ ಆಟೋ ಚಾಲಕರ ಸೇವಾ ಶುಲ್ಕವನ್ನು ಕರ್ನಾಟಕ ಸಾರಿಗೆ ಇಲಾಖೆ ನವೆಂಬರ್ 25, 2022 ರಂದು ಶೇಕಡಾ 5 ಕ್ಕೆ (ಮೂಲ ಶುಲ್ಕಕ್ಕೆ ಅನ್ವಯವಾಗುವ ಜಿಎಸ್​ಟಿಯೊಂದಿಗೆ) ಮಿತಗೊಳಿಸಿತ್ತು.

VISTARANEWS.COM


on

Cab service
Koo

ಬೆಂಗಳೂರು: ಆ್ಯಪ್ ಮೂಲಕ ಕಾರ್ಯಾಚರಿಸುವ ಕ್ಯಾಬ್ ಅಗ್ರಿಗೇಟರ್​ಗಳು (Cab Service) ಗ್ರಾಹಕರಿಂದ ಸಂಗ್ರಹಿಸುವ ಸೇವಾ ಶುಲ್ಕ ನಿಗದಿಪಡಿಸುವ ಕರ್ನಾಟಕ ರಾಜ್ಯ ಸರ್ಕಾರದ ಅಧಿಸೂಚನೆ ಪ್ರಶ್ನಿಸಿ ಸಲ್ಲಿಸಿದ್ದ ರಿಟ್ ಅರ್ಜಿ ಕರ್ನಾಟಕ ಹೈಕೋರ್ಟ್ ಸೋಮವಾರ ವಜಾಗೊಳಿಸಿದೆ ಎಂದು ಬಾರ್ ಆ್ಯಂಡ್​ ಬೆಂಚ್ ವರದಿ ಮಾಡಿದೆ. ಕ್ಯಾಬ್​ ಕಂಪನಿಗಳು ಗರಿಷ್ಠ ಶೇಕಡಾ 5ರಷ್ಟು ಸೇವಾ ಶುಲ್ಕ ಮಾತ್ರ ಸಂಗ್ರಹಿಬಹುದು ಎಂದು ರಾಜ್ಯ ಸರ್ಕಾರ ಹೊರಡಿಸಿದ್ದ ಆದೇಶವನ್ನು ನ್ಯಾಯಾಲಯ ಎತ್ತಿಹಿಡಿದಿದೆ. ಇದರಿಂದಾಗಿ ಬೆಂಗಳೂರು ನಗರ ಸೇರಿದಂತೆ ಕರ್ನಾಟಕದಲ್ಲಿ ಆ್ಯಪ್ ಆಧಾರಿತ ಕ್ಯಾಬ್​​ಗಳನ್ನು ಬಳಸುವ ಗ್ರಾಹಕರಿಗೆ ಅನುಕೂಲವಾಗಲಿದೆ. ಮಿತಿ ಮೀರಿ ಶುಲ್ಕ ವಿಧಿಸುವ ಕಂಪನಿಗಳ ಯೋಜನೆಗೆ ಕಡಿವಾಣ ಬೀಳಲಿದೆ.

ನ್ಯಾಯಾಲಯವು ಆದೇಶದಲ್ಲಿ. ರಿಟ್ ಅರ್ಜಿಗಳನ್ನು ವಜಾಗೊಳಿಸಲಾಗಿದೆ. ಕ್ಯಾಬ್ ಸಂಸ್ಥೆಗಳು ಈಗ ನಿಗದಿಪಡಿಸಿದ ಶೇಕಡಾ 5 ಸೇವಾ ಶುಲ್ಕ ಸಂಗ್ರಹಿಸಲು ಮಾತ್ರ ಅರ್ಹರಾಗಿರುತ್ತಾರೆ ಎಂದು ಸ್ಪಷ್ಟಪಡಿಸಲಾಗಿದೆ. ಅಪ್ಲಿಕೇಶನ್ ಆಧಾರಿತ ಆಟೋ ಚಾಲಕರ ಸೇವಾ ಶುಲ್ಕವನ್ನು ಕರ್ನಾಟಕ ಸಾರಿಗೆ ಇಲಾಖೆ ನವೆಂಬರ್ 25, 2022 ರಂದು ಶೇಕಡಾ 5 ಕ್ಕೆ (ಮೂಲ ಶುಲ್ಕಕ್ಕೆ ಅನ್ವಯವಾಗುವ ಜಿಎಸ್​ಟಿಯೊಂದಿಗೆ) ಮಿತಗೊಳಿಸಿತ್ತು. ಆದರೆ ಉಬರ್, ಓಲಾ ಮತ್ತು ರ್ಯಾಪಿಡೊದಂತಹ ರೈಡ್-ಹೆಯ್ಲಿಂಗ್ ಅಪ್ಲಿಕೇಶನ್ ಗಳು ಈ ಕ್ರಮವನ್ನು ಪ್ರಶ್ನಿಸಿದ್ದವು. ಶೇಕಡಾ 20 ರಷ್ಟು ಸಾಮಾನ್ಯ ದರ ವಿಧಿಸಲು ಅನುಮತಿ ನೀಡಬೇಕು ಮತ್ತು ಮೂಲ ದರದ ಜತೆಗೆ ಶೇಕಡಾ 20ರಷ್ಟು ಸರ್ಜ್​ ಪ್ರೈಸ್ ಅಥವಾ ದುಪ್ಪಟ್ಟು ಶುಲ್ಕ ವಿಧಿಸಲು ಅವಕಾಶ ನೀಡಬೇಕು ಎಂದು ಕೋರಿತ್ತು. ಈ ಎಲ್ಲ ಕಂಪನಿಗಳು ರಾಜ್ಯ ಸರ್ಕಾರದ ಅಧಿಸೂಚನೆಯನ್ನು ಕಾನೂನುಬಾಹಿರ, ನಿರಂಕುಶ ಮತ್ತು ತರ್ಕರಹಿತ ಎಂದು ವಾದಿಸಿದ್ದವು.

ಇದನ್ನು ಓದಿ : Lok Sabha Election : ಷೇರು ಮಾರುಕಟ್ಟೆ ಸಂಸ್ಥೆಯ ಪ್ರಕಾರ ಬಿಜೆಪಿ ಕಳೆದ ಬಾರಿಗಿಂತ ಹೆಚ್ಚು ಸೀಟು ಗೆಲ್ಲಲಿದೆ; ಲೆಕ್ಕಾಚಾರ ಹೀಗಿದೆ

ನೋಟಿಸ್ ಅನ್ನು ನ್ಯಾಯಾಲಯವು ಜನವರಿ 2023 ರಲ್ಲಿ ತಡೆಹಿಡಿದಿತ್ತು. ಶೇಕಡಾ 10 ರ ಅನುಕೂಲಕರ ಶುಲ್ಕದೊಂದಿಗೆ ಅಗ್ರಿಗೇಟರ್​ಗಳು ಅಲ್ಪಾವಧಿಗೆ ಕಾರ್ಯನಿರ್ವಹಿಸಲು ಅವಕಾಶ ನೀಡಿತು. ಸೋಮವಾರ, ನ್ಯಾಯಾಲಯವು ಅಂತಿಮವಾಗಿ ಅರ್ಜಿಗಳನ್ನು ವಜಾಗೊಳಿಸಿತು. ಈ ತೀರ್ಪಿನಿಂದ ಬೆಂಗಳೂರಿನ ಸಾವಿರಾರು ನಾಗರಿಕರಿಗೆ ಅನುಕೂಲವಾಗಲಿದೆ ಎಂದು ಸಾರಿಗೆ ಸಚಿವ ರಾಮಲಿಂಗಾ ರೆಡ್ಡಿ ಹೇಳಿದ್ದಾರೆ.

Continue Reading

ದೇಶ

Laila Khan Case: ನಟಿ ಲೈಲಾ ಖಾನ್‌ ಸೇರಿ 6 ಜನರ ಹತ್ಯೆ;‌ ನಟಿಯ ತಂದೆ ಪರ್ವೇಜ್‌ ತಕ್‌ಗೆ ಗಲ್ಲು ಶಿಕ್ಷೆ!

Laila Khan Case: ಸೆಲಿನಾ ಅವರಿಗೆ ಪರ್ವೇಜ್‌ ತಕ್‌ ಮೂರನೇ ಪತಿಯಾಗಿದ್ದ. ಸೆಲಿನಾ ತಕ್‌ ಅವರು ಶ್ರೀಮಂತರಾಗಿದ್ದ ಕಾರಣ, ಅವರಿಗೆ ಸಂಬಂಧಿಸಿದ ಎಲ್ಲ ಆಸ್ತಿಯನ್ನು ಹೊಡೆಯಲು ಪರ್ವೇಜ್‌ ತಕ್‌ ಕುತಂತ್ರ ಮಾಡುತ್ತಿದ್ದ. ಇದಕ್ಕಾಗಿ, ಅವರ ಜತೆ ಜಗಳವಾಡುತ್ತಿದ್ದ. ಎಲ್ಲ ಆಸ್ತಿಯನ್ನು ತನ್ನ ಹೆಸರಿಗೆ ಬರೆದುಕೊಡುವಂತೆ ಒತ್ತಾಯಿಸುತ್ತಿದ್ದ. ಆಸ್ತಿಗಾಗಿ ಜಗಳ ಕಾಯುತ್ತಿದ್ದ. ಕೊನೆಗೊಂದು ದಿನ ಲೈಲಾ ಖಾನ್‌ ಸೇರಿ ಆರು ಮಂದಿಯನ್ನು ಕೊಲೆ ಮಾಡಿದ್ದ. ಈಗ ಈತನಿಗೆ ಗಲ್ಲು ಶಿಕ್ಷೆ ವಿಧಿಸಲಾಗಿದೆ.

VISTARANEWS.COM


on

Laila Khan Case
Koo

ಮುಂಬೈ: ಬಾಲಿವುಡ್‌ ನಟಿ, ವಫಾ, ಫರಾರ್‌ ಸಿನಿಮಾಗಳ ಖ್ಯಾತಿಯ ಲೈಲಾ ಖಾನ್‌ (Laila Khan Case) ಹಾಗೂ ಅವರ ಐವರು ಸಂಬಂಧಿಕರ ಹತ್ಯೆ ಪ್ರಕರಣಕ್ಕೆ ಸಂಬಂಧಿಸಿದಂತೆ ಮುಂಬೈ ನ್ಯಾಯಾಲಯವು (Mumbai Court) ನಟಿಯ ಮಲ ತಂದೆ ಪರ್ವೇಜ್‌ ತಕ್‌ಗೆ (Parvez Tak) ಗಲ್ಲು ಶಿಕ್ಷೆ ವಿಧಿಸಿದೆ. ಆ ಮೂಲಕ 13 ವರ್ಷಗಳ ಪ್ರಕರಣಕ್ಕೆ ಮುಂಬೈ ನ್ಯಾಯಾಲಯವು ಅಂತ್ಯ ಹಾಡಿದೆ. ಆರೂ ಅಪರಾಧಿಗಳಿಗೆ ಗಲ್ಲು ಶಿಕ್ಷೆ ವಿಧಿಸಿ ಹೆಚ್ಚುವರಿ ಸೆಷನ್ಸ್‌ ನ್ಯಾಯಾಧೀಶ ಸಚಿನ್‌ ಪವಾರ್‌ ಅವರು ಆದೇಶ ಹೊರಡಿಸಿದ್ದಾರೆ. ಇವರು ಮೇ 9ರಂದು ವಿಚಾರಣೆ ಅಂತ್ಯಗೊಳಿಸಿ, ಶಿಕ್ಷೆಯ ಪ್ರಮಾಣವನ್ನು ಕಾಯ್ದಿರಿಸಿದ್ದರು.

ಏನಿದು ಪ್ರಕರಣ?

2011ರ ಫೆಬ್ರವರಿಯಲ್ಲಿ ಮಹಾರಾಷ್ಟ್ರದ ನಾಶಿಕ್‌ ಜಿಲ್ಲೆಯ ಇಗಟ್‌ಪುರಿಯಲ್ಲಿರುವ ನಿವಾಸದಲ್ಲಿ ನಟಿ ಲೈಲಾ ಖಾನ್‌, ಲೈಲಾ ಖಾನ್‌ ತಾಯಿ ಸೆಲಿನಾ ಸೇರಿ ಆರು ಜನರನ್ನು ಪರ್ವೇಜ್‌ ತಕ್‌ ಸೇರಿ ಹಲವರು ಕೊಲೆ ಮಾಡಿದ್ದರು. ಆಸ್ತಿ ವಿಚಾರಕ್ಕೆ ಸಂಬಂಧಿಸಿದಂತೆ ಸೆಲಿನಾ ಸೇರಿ ಆರು ಮಂದಿಯನ್ನು ಹತ್ಯೆಗೈದು, ಫಾರ್ಮ್‌ಹೌಸ್‌ನಲ್ಲಿಯೇ ಸಮಾಧಿ ಮಾಡಲಾಗಿತ್ತು. ಜಮ್ಮು-ಕಾಶ್ಮೀರ ಪೊಲೀಸರು ಪರ್ವೇಜ್‌ ತಕ್‌ನನ್ನು ಬಂಧಿಸಿದ ಬಳಿಕವೇ ಫಾರ್ಮ್‌ಹೌಸ್‌ನಲ್ಲಿ ಲೈಲಾ ಖಾನ್‌ ಸೇರಿ ಎಲ್ಲರ ಶವಗಳು ಪತ್ತೆಯಾಗಿದ್ದವು.

Court Order

ಕೊಲೆ ಮಾಡಲು ಏನು ಕಾರಣ?

ಸೆಲಿನಾ ಅವರಿಗೆ ಪರ್ವೇಜ್‌ ತಕ್‌ ಮೂರನೇ ಪತಿಯಾಗಿದ್ದ. ಸೆಲಿನಾ ತಕ್‌ ಅವರು ಶ್ರೀಮಂತರಾಗಿದ್ದ ಕಾರಣ, ಅವರಿಗೆ ಸಂಬಂಧಿಸಿದ ಎಲ್ಲ ಆಸ್ತಿಯನ್ನು ಹೊಡೆಯಲು ಪರ್ವೇಜ್‌ ತಕ್‌ ಕುತಂತ್ರ ಮಾಡುತ್ತಿದ್ದ. ಇದಕ್ಕಾಗಿ, ಅವರ ಜತೆ ಜಗಳವಾಡುತ್ತಿದ್ದ. ಎಲ್ಲ ಆಸ್ತಿಯನ್ನು ತನ್ನ ಹೆಸರಿಗೆ ಬರೆದುಕೊಡುವಂತೆ ಒತ್ತಾಯಿಸುತ್ತಿದ್ದ. ಆಸ್ತಿಗಾಗಿ ಜಗಳ ಕಾಯುತ್ತಿದ್ದ ಕಾರಣ ಪರ್ವೇಜ್‌ ತಕ್‌ನನ್ನು ಸೆಲಿನಾ ಅವರು ಮನೆಗೆಲಸದವನ ರೀತಿ ನೋಡುತ್ತಿದ್ದರು. ಮನೆಯಿಂದ ಈತನನ್ನು ದೂರವೇ ಇಟ್ಟಿದ್ದರು ಎಂದು ತಿಳಿದುಬಂದಿತ್ತು.

2011ರ ಫೆಬ್ರವರಿಯಲ್ಲಿ ಸೆಲಿನಾ ಸೇರಿ ಎಲ್ಲರನ್ನೂ ಕೊಲೆ ಮಾಡಲು ಪ್ಲಾನ್‌ ರೂಪಿಸಿದ್ದ. ಇದಕ್ಕಾಗಿ ಆತ ಹಲವರಿಗೆ ಹಣವನ್ನೂ ಕೊಟ್ಟು ಕರೆದುಕೊಂಡು ಹೋಗಿದ್ದ. ಮನೆಗೆ ಹೋದವನೇ, ಸೆಲಿನಾ ಅವರ ಜತೆ ಜಗಳವಾಡಿದ್ದಾನೆ. ಮೊದಲು ಸೆಲಿನಾ ಅವರನ್ನು ಕೊಂದ ಪರ್ವೇಜ್‌ ತಕ್‌, ಬಳಿಕ ಲೈಲಾ ಖಾನ್‌ ಸೇರಿ ಆರು ಮಂದಿಯನ್ನು ಕೊಂದು, ಅದೇ ಫಾರ್ಮ್‌ಹೌಸ್‌ನಲ್ಲಿ ಹೂತು ಹಾಕಿದ್ದ. ಕೆಲ ತಿಂಗಳ ಬಳಿಕ ಈತನನ್ನು ಕಾಶ್ಮೀರ ಪೊಲೀಸರು ಬಂಧಿಸಿದ್ದರು. ಫಾರ್ಮ್‌ಹೌಸ್‌ನಲ್ಲಿ ಪರಿಶೀಲನೆ ನಡೆಸಿದ್ದಾಗ ಆರೂ ಮಂದಿಯ ಶವಗಳು ಕೊಳೆತ ಸ್ಥಿತಿಯಲ್ಲಿ ಪತ್ತೆಯಾಗಿದ್ದವು.

ಇದನ್ನೂ ಓದಿ: Murder Case: ನಟಿ, ಕಾಂಗ್ರೆಸ್ ನಾಯಕಿ ವಿದ್ಯಾ ಹತ್ಯೆ ಆರೋಪಿ ಪತಿಯ ಬಂಧನ

Continue Reading

ಪ್ರಮುಖ ಸುದ್ದಿ

Other Backward Classes: 2011ರ ನಂತರ ನೀಡಿದ್ದ ಒಬಿಸಿ ಪ್ರಮಾಣಪತ್ರಗಳನ್ನು ರದ್ದು ಮಾಡಿದ ಕೋಲ್ಕೊತಾ ಹೈಕೋರ್ಟ್​​

Other Backward Classes : 2012 ರಲ್ಲಿ ಅಂಗೀಕರಿಸಿದ ರಾಜ್ಯ ಸರ್ಕಾರದ ಹೊಸ ಕಾನೂನಿನ ಅಡಿಯಲ್ಲಿ ಹಲವಾರು ಸಮುದಾಯಗಳಿಗೆ ಇತರ ಹಿಂದುಳಿದ ವರ್ಗಗಳ ಮೀಸಲಾತಿ ನೀಡಲಾಗಿತ್ತು. ಅದನ್ನು ನ್ಯಾಯಾಲಯ ರದ್ದುಗೊಳಿಸಿದೆ. ಆದಾಗ್ಯೂ, ನ್ಯಾಯಮೂರ್ತಿಗಳಾದ ತಪಬ್ರತಾ ಚಕ್ರವರ್ತಿ ಮತ್ತು ರಾಜಶೇಖರ್ ಮಂಥಾ ಅವರು, 2010 ಕ್ಕಿಂತ ಮೊದಲು ವರ್ಗೀಕರಿಸಿದ ಒಬಿಸಿಯ 66 ವರ್ಗಗಳ ವಿಚಾರದಲ್ಲಿ ಹಸ್ತಕ್ಷೇಪ ಮಾಡಿಲ್ಲ.

VISTARANEWS.COM


on

Calcutta High Court
Koo

ಕೋಲ್ಕತಾ: ಮಮತಾ ಬ್ಯಾನರ್ಜಿ ನೇತೃತ್ವದ ತೃಣಮೂಲ ಕಾಂಗ್ರೆಸ್ ಆಡಳಿತದಲ್ಲಿ 2011ರಿಂದ ಪಶ್ಚಿಮ ಬಂಗಾಳದಲ್ಲಿ ನೀಡಲಾಗುತ್ತಿರುವ ಇತರ ಹಿಂದುಳಿದ ವರ್ಗಗಳ (Other Backward Classes) ಎಲ್ಲಾ ಪ್ರಮಾಣಪತ್ರಗಳನ್ನು ಕೋಲ್ಕೊತಾ ಹೈಕೋರ್ಟ್ ರದ್ದುಗೊಳಿಸಿದೆ. ಅದು ಹೊಸದಾಗಿ ಪಟ್ಟಿಗೆ ಸೇರ್ಪಡೆ ಮಾಡಲಾಗಿರುವ ಜಾತಿಗಳಿಗೆ ಅನ್ವಯ. ಅಂತೆಯೇ ಇದು ಹಾಲಿ ಈ ಸಮುದಾಯದ ಜನರು ಹೊಂದಿರುವ ಉದ್ಯೋಗಗಳ ಮೇಲೆ ಪರಿಣಾಮ ಬೀರುವುದಿಲ್ಲ ಎಂದು ನ್ಯಾಯಾಲಯ ಹೇಳಿದೆ. ಆದರೆ, ಮುಖ್ಯಮಂತ್ರಿ ಮಮತಾ ಬ್ಯಾನರ್ಜಿ ಈ ಆದೇಶವನ್ನು ಸ್ವೀಕರಿಸಿವುದಿಲ್ಲ ಎಂದು ಹೇಳಿದ್ದಾರೆ. ತಪಶಿಲಿ ಸಮುದಾಯಕ್ಕೆ ನೀಡಲಾದ ಹಕ್ಕುಗಳನ್ನು ಕಸಿದುಕೊಳ್ಳುವ ಆದೇಶವನ್ನು ತಾವು ಒಪ್ಪುವುದಿಲ್ಲ ಎಂಬುದಾಗಿ ಹೇಳಿಕೊಂಡಿದ್ದಾರೆ.

2012ರಲ್ಲಿ ಅಂಗೀಕರಿಸಿದ ರಾಜ್ಯ ಸರ್ಕಾರದ ಹೊಸ ಕಾನೂನಿನ ಅಡಿಯಲ್ಲಿ ಹಲವಾರು ಸಮುದಾಯಗಳಿಗೆ ಇತರ ಹಿಂದುಳಿದ ವರ್ಗಗಳ ಮೀಸಲಾತಿ ನೀಡಲಾಗಿತ್ತು. ಅದನ್ನು ನ್ಯಾಯಾಲಯ ರದ್ದುಗೊಳಿಸಿದೆ. ಆದಾಗ್ಯೂ, ನ್ಯಾಯಮೂರ್ತಿಗಳಾದ ತಪಬ್ರತಾ ಚಕ್ರವರ್ತಿ ಮತ್ತು ರಾಜಶೇಖರ್ ಮಂಥಾ ಅವರು, 2010 ಕ್ಕಿಂತ ಮೊದಲು ವರ್ಗೀಕರಿಸಿದ ಒಬಿಸಿಯ 66 ವರ್ಗಗಳ ವಿಚಾರದಲ್ಲಿ ಹಸ್ತಕ್ಷೇಪ ಮಾಡಿಲ್ಲ. ಈ ವರ್ಗಗಳ ಕುರಿತು ಕೋರ್ಟ್​ಗೆ ಸಲ್ಲಿಸಲಾಗಿದ್ದ ಅರ್ಜಿಗಳಲ್ಲಿ ಪ್ರಶ್ನಿಸಲಾಗಿಲ್ಲ ಎಂದು ಅಭಿಪ್ರಾಯಪಟ್ಟಿದ್ದಾರೆ.

ಅರ್ಜಿಯಲ್ಲಿ ಏನಿತ್ತು?

“2010 ರ ನಂತರ ನೀಡಲಾದ ಎಲ್ಲಾ ಒಬಿಸಿ ಪ್ರಮಾಣಪತ್ರಗಳು 1993 (ಪಶ್ಚಿಮ ಬಂಗಾಳ ಹಿಂದುಳಿದ ವರ್ಗಗಳ ಆಯೋಗ) ಕಾಯ್ದೆಯನ್ನು ಕಡೆಗಣಿಸಿವೆ ಎಂದು 2011 ರಲ್ಲಿ ಸಲ್ಲಿಸಲಾದ ಪಿಐಎಲ್​ನಲ್ಲಿ ಪ್ರಶ್ನಿಸಲಾಗಿತ್ತು . ವಾಸ್ತವವಾಗಿ ಹಿಂದುಳಿದ ವರ್ಗಕ್ಕೆ ಸೇರಿದವರಿಗೆ ಅವರ ಸರಿಯಾದ ಪ್ರಮಾಣಪತ್ರಗಳನ್ನು ನೀಡಲಾಗಿಲ್ಲ. 2010ರ ನಂತರ ನೀಡಲಾದ ಎಲ್ಲ ಒಬಿಸಿ ಪ್ರಮಾಣಪತ್ರಗಳನ್ನು ವಿಭಾಗೀಯ ಪೀಠ ರದ್ದುಪಡಿಸಿದೆ. 2010ಕ್ಕಿಂತ ಮೊದಲು ಒಬಿಸಿ ಪ್ರಮಾಣಪತ್ರ ಹೊಂದಿರುವವರು ಕೋಲ್ಕೊತಾ ಹೈಕೋರ್ಟ್ ವಿಚಾರಣೆಯ ಭಾರವನ್ನು ಹೊರುವುದಿಲ್ಲ” ಎಂದು ವಕೀಲ ಸುದೀಪ್ತಾ ದಾಸ್ ಗುಪ್ತಾ ವಾದಿಸಿದ್ದರು.

ಆದಾಗ್ಯೂ, ಈ ಆದೇಶವು ಈಗಾಗಲೇ ಸೇವೆಯಲ್ಲಿರುವ ಅಥವಾ ಮೀಸಲಾತಿಯಿಂದ ಪ್ರಯೋಜನ ಪಡೆದ ಅಥವಾ ರಾಜ್ಯದ ಯಾವುದೇ ಆಯ್ಕೆ ಪ್ರಕ್ರಿಯೆಯಲ್ಲಿ ಯಶಸ್ವಿಯಾದ ಹೊರಹಾಕಲ್ಪಟ್ಟ ವರ್ಗಗಳ ನಾಗರಿಕರ ಸೇವೆಗಳ ಮೇಲೆ ಪರಿಣಾಮ ಬೀರುವುದಿಲ್ಲ ಎಂದು ನ್ಯಾಯಾಲಯ ಸ್ಪಷ್ಟಪಡಿಸಿದೆ.

ಮಮತಾ ವಿರೋಧ

ಪಶ್ಚಿಮ ಬಂಗಾಳ ಸರ್ಕಾರ ಪರಿಚಯಿಸಿದ ಒಬಿಸಿ ಮೀಸಲಾತಿ ಕೋಟಾ ಮುಂದುವರಿಯುತ್ತದೆ. ಮನೆ-ಮನೆ ಸಮೀಕ್ಷೆ ನಡೆಸಿದ ನಂತರ ನಾವು ಮಸೂದೆ ಸಿದ್ಧಪಡಿಸಿದ್ದೇವೆ. ಅದನ್ನು ಕ್ಯಾಬಿನೆಟ್ ಮತ್ತು ವಿಧಾನಸಭೆ ಅಂಗೀಕರಿಸಿದೆ ” ಎಂದು ಮಮತಾ ಬ್ಯಾನರ್ಜಿ ಹೇಳಿದ್ದಾರೆ.

ಇದನ್ನೂ ಓದಿ: Bomb Threat : ಗೃಹ ಸಚಿವಾಲಯಕ್ಕೆ ಬಾಂಬ್ ಬೆದರಿಕೆ; ದೆಹಲಿಯಲ್ಲಿ ಆತಂಕ

ಕೇಂದ್ರೀಯ ಸಂಸ್ಥೆಗಳನ್ನು ಬಳಸಿಕೊಂಡು ಜನರಿಗೆ ನೀಡುವ ಸೌಲಭ್ಯಗಳನ್ನು ತಡೆಯಲು ಬಿಜೆಪಿ ಪಿತೂರಿ ನಡೆಸಿದೆ. ಅಂತಹ ಧೈರ್ಯವನ್ನು ಅವರು ಹೇಗೆ ತೋರಿಸುತ್ತಾರೆ ಎಂದು ಅವರು ಪ್ರಶ್ನಿಸಿದ್ದಾರೆ. ನ್ಯಾಯಾಲಯದ ತೀರ್ಪು ತಪಶಿಲಿ ಸಮುದಾಯಕ್ಕೆ ಮೀಸಲಾತಿಯನ್ನು ರದ್ದುಗೊಳಿಸುವ ಬಿಜೆಪಿಯ ಪ್ರಯತ್ನಗಳ ಭಾಗವಾಗಿದೆ ಎಂದು ಪಕ್ಷದ ಹಿರಿಯ ಮುಖಂಡ ಮತ್ತು ಮಮತಾ ಬ್ಯಾನರ್ಜಿ ಅವರ ಸೋದರಳಿಯ ಅಭಿಷೇಕ್ ಬ್ಯಾನರ್ಜಿ ಆರೋಪಿಸಿದ್ದಾರೆ.

ಒಬ್ಬ ನ್ಯಾಯಾಧೀಶರು ‘ನಾನು ಆರ್‌ಎಸ್‌ಎಸ್‌ ವ್ಯಕ್ತಿ’ ಎಂದು ಹೇಳುತ್ತಿದ್ದಾರೆ/ ಇನ್ನೊಬ್ಬರು ಬಿಜೆಪಿಗೆ ಸೇರುತ್ತಾರೆ… ತಪಶಿಲಿಗಳಿಗೆ ಮೀಸಲಾತಿಯನ್ನು ರದ್ದುಗೊಳಿಸಲು ಮೋದಿ ಬಯಸಿದ್ದಾರೆ. ನಾನು ಅದಕ್ಕೆ ಅವಕಾಶ ನೀಡುವುದಿಲ್ಲ. ಅವರು ಆದಿವಾಸಿಗಳ ಹಕ್ಕುಗಳನ್ನು ಕಸಿದುಕೊಳ್ಳಲು ಬಯಸುತ್ತಾರೆ ಎಂದು ಅವರು ಅಭಿಷೇಕ್ ಹೇಳಿದ್ದಾರೆ.

Continue Reading

ಕರ್ನಾಟಕ

Cauvery Dispute: ತಮಿಳುನಾಡಿಗೆ 2.5 ಟಿಎಂಸಿ ಕಾವೇರಿ ನೀರು ಹರಿಸಲು CWMA ಸೂಚನೆ

Cauvery Dispute: ತಮಿಳುನಾಡಿಗೆ ಮೇ ತಿಂಗಳ ಪಾಲಿನ 2.5 ಟಿಎಂಸಿ ಹರಿಸುವಂತೆ ಕರ್ನಾಟಕಕ್ಕೆ, ಕಾವೇರಿ ನೀರು ನಿರ್ವಹಣಾ ಪ್ರಾಧಿಕಾರ ನಿರ್ದೇಶನ ನೀಡಿದೆ.

VISTARANEWS.COM


on

Cauvery Dispute
Koo

ಬೆಂಗಳೂರು: ತಮಿಳುನಾಡಿಗೆ 2.5 ಟಿಎಂಸಿ ಕಾವೇರಿ ನೀರು (Cauvery Dispute) ಹರಿಸುವಂತೆ ಕರ್ನಾಟಕಕ್ಕೆ, ಕಾವೇರಿ ನೀರು ನಿರ್ವಹಣಾ ಪ್ರಾಧಿಕಾರ (CWMA) ಸೂಚನೆ ನೀಡಿದೆ. ಮೇ ತಿಂಗಳ ಪಾಲಿನ 2.5 ಟಿಎಂಸಿ ಹರಿಸಲು ರಾಜ್ಯಕ್ಕೆ ಸಿಡಬ್ಲ್ಯುಎಂಎ ನಿರ್ದೇಶನ ನೀಡಿದೆ.

ಇತ್ತೀಚೆಗೆ ನಡೆದ ಕಾವೇರಿ ನೀರು ನಿರ್ವಹಣಾ ಸಮಿತಿ (CWRC) ಸಮಿತಿ ಸಭೆಯಲ್ಲಿ ಕರ್ನಾಟಕದಲ್ಲಿ ಬರಗಾಲದ ಹಿನ್ನೆಲೆಯಲ್ಲಿ ನೀರು ಬಿಡಲು ಸಾಧ್ಯವಿಲ್ಲ ಎಂದು ಸಮಿತಿಯು ತಮಿಳುನಾಡಿಗೆ ಸೂಚಿಸಿತ್ತು. ಆದರೆ, ಇದೀಗ ಮಂಗಳವಾರ ನಡೆದ ಸಭೆ ಕಾವೇರಿ ನೀರು ನಿರ್ವಹಣಾ ಪ್ರಾಧಿಕಾರದ (CWMA) ಸಭೆಯಲ್ಲಿ 2.5 ಟಿಎಂಸಿ ನೀರು ಹರಿಸುವಂತೆ ಕರ್ನಾಟಕಕ್ಕೆ ಸೂಚಿಸಲಾಗಿದೆ.

ಫೆಬ್ರವರಿಯಿಂದ ಮೇವರೆಗೆ ಕರ್ನಾಟಕವು ಪ್ರತಿ ತಿಂಗಳು 2.50 ಟಿಎಂಸಿಯಂತೆ ಪರಿಸರ ಹರಿವನ್ನು ನಿರಂತರವಾಗಿ ಬಿಡುಗಡೆ ಮಾಡಬೇಕು ಎಂದು ಕಳೆದ ಫೆಬ್ರವರಿಯಲ್ಲಿಯೇ ತಮಿಳುನಾಡು ಸಿಡಬ್ಲ್ಯೂಆರ್‌ಸಿ ಸಭೆಯಲ್ಲಿ ವಾದ ಮಂಡಿಸಿತ್ತು. ಸುಪ್ರೀಂ ಕೋರ್ಟ್‌ ಆದೇಶದಂತೆ ಮಾರ್ಚ್‌ ಹಾಗೂ ಏಪ್ರಿಲ್‌ನಲ್ಲಿ ಕರ್ನಾಟಕವು ತಮಿಳುನಾಡಿಗೆ ನೀರು ಬಿಟ್ಟಿತ್ತು. ಆದರೆ, ಮೇ ಅಂತ್ಯದವರೆಗೂ ನೀರು ಬಿಡಬೇಕು ಎಂಬುದು ತಮಿಳುನಾಡಿನ ವಾದವಾಗಿತ್ತು. ಇದನ್ನು ಸಿಡಬ್ಲ್ಯೂಆರ್‌ಸಿ ನಿರಾಕರಿಸಿತ್ತು. ಆದರೆ, ಈಗ ನೀರು ಬಿಡುವಂತೆ ಕಾವೇರಿ ನೀರು ನಿರ್ವಹಣಾ ಪ್ರಾಧಿಕಾರ ಕರ್ನಾಟಕಕ್ಕೆ ನಿರ್ದೇಶನ ನೀಡಿದೆ.

ಗರಿಷ್ಠ ತಾಪಮಾನ ಇಳಿಕೆ; ಗುಡುಗು ಸಹಿತ ಭಾರಿ ಮಳೆ ಎಚ್ಚರಿಕೆ

ಬೆಂಗಳೂರು: ಮೇ 21ರಂದು ಚದುರಿದಂತೆ ಮಧ್ಯಮ ಮಳೆಯಾಗಲಿದ್ದು, ರಾಜ್ಯಾದ್ಯಂತ ಪ್ರತ್ಯೇಕ ಕಡೆಗಳಲ್ಲಿ ಭಾರಿ ಮಳೆಯಾಗುವ (Rain News) ಸಾಧ್ಯತೆಯಿದೆ. ರಾಜ್ಯದ ಪ್ರತ್ಯೇಕ ಸ್ಥಳಗಳಲ್ಲಿ ಗುಡುಗು ಮಿಂಚು ಮತ್ತು 30-40 ಕಿ.ಮೀ ವೇಗದಲ್ಲಿ ಗಾಳಿ ಬೀಸುವ ಸಾಧ್ಯತೆಯಿದೆ ಎಂದು ಹವಾಮಾನ ಇಲಾಖೆ (karnataka Weather Forecast) ಎಚ್ಚರಿಕೆಯನ್ನು ನೀಡಿದೆ.

ದಕ್ಷಿಣ ಒಳನಾಡಿನ ತುಮಕೂರು, ಮೈಸೂರು ಮತ್ತು ಚಿತ್ರದುರ್ಗ ಜಿಲ್ಲೆಗಳಲ್ಲಿ ಹಗುರದಿಂದ ಮಧ್ಯಮ ಮಳೆಯಾಗುವ ಸಾಧ್ಯತೆಯಿದೆ. ಉಳಿದ ಭಾಗಗಳಲ್ಲಿ ವ್ಯಾಪಕವಾಗಿ ಮಧ್ಯಮ ಮಳೆಯಾಗಲಿದೆ. ಉತ್ತರ ಒಳನಾಡಿನ ಹಾವೇರಿ, ಬಳ್ಳಾರಿ ಮತ್ತು ಬೆಳಗಾವಿಯಲ್ಲಿ ಸಾಧಾರಣ ಮಳೆಯಾಗುವ ಸಾಧ್ಯತೆಯಿದೆ. ಬಾಗಲಕೋಟೆ, ವಿಜಯಪುರ, ರಾಯಚೂರು, ಕೊಪ್ಪಳ, ವಿಜಯನಗರ ಮತ್ತು ಧಾರವಾಡ ಜಿಲ್ಲೆಯಲ್ಲಿ ಹಗುರವಾದ ಮಳೆಯಾಗಲಿದೆ.

ಮಲೆನಾಡಿನ ಹಾಸನ, ಚಿಕ್ಕಮಗಳೂರು, ಕೊಡಗು ಮತ್ತು ಶಿವಮೊಗ್ಗ ಜಿಲ್ಲೆಗಳಲ್ಲಿ ಚದುರಿದಂತೆ ಹಗುರದಿಂದ ಸಾಧಾರಣ ಮಳೆಯಾಗುವ ಸಾಧ್ಯತೆಯಿದೆ. ಕರಾವಳಿಯ ದಕ್ಷಿಣ ಕನ್ನಡ, ಉಡುಪಿ ಮತ್ತು ಉತ್ತರ ಕನ್ನಡದಲ್ಲಿ ಚದುರಿದಂತೆ ಸಾಧಾರಣ ಮಳೆಯಾಗಲಿದೆ.

ಬೆಂಗಳೂರಿನಲ್ಲಿ ಸಾಧಾರಣ ಮಳೆಯಾಗುವ ನಿರೀಕ್ಷೆ ಇದ್ದು, ಗರಿಷ್ಠ ಮತ್ತು ಕನಿಷ್ಠ ತಾಪಮಾನ ಅನುಕ್ರಮವಾಗಿ ಸುಮಾರು 29 ಮತ್ತು 22 ಡಿ.ಸೆ ಇರಲಿದೆ.

ಇದನ್ನೂ ಓದಿ: Food Department : ಜೀವಂತ ಇದ್ದವಳನ್ನು ಸತ್ತಿದ್ದಾಗಿ ಘೋಷಿಸಿದ ಆಹಾರ ಇಲಾಖೆ; ರೇಷನ್‌ ಕಾರ್ಡ್‌ನಿಂದಲೇ ಹೆಸರು ಡಿಲೀಟ್‌

ಬಿರುಗಾಳಿ ಎಚ್ಚರಿಕೆ

ಗುಡುಗು ಸಹಿತ ಭಾರೀ ಮಳೆಯೊಂದಿಗೆ ಗಂಟೆಗೆ 30-40 ಕಿ.ಮೀ ವ್ಯಾಪ್ತಿಯಲ್ಲಿ ಗಾಳಿ ಬೀಸಲಿದೆ. ಹೀಗಾಗಿ ದಕ್ಷಿಣ ಕನ್ನಡ, ಚಿತ್ರದುರ್ಗ, ಚಿಕ್ಕಮಗಳೂರು, ಕೊಡಗು, ಶಿವಮೊಗ್ಗ, ಉಡುಪಿ ಜಿಲ್ಲೆಗಳಲ್ಲಿ ಆರೆಂಜ್ ಅಲರ್ಟ್ ಘೋಷಿಸಲಾಗಿದೆ. ಇನ್ನೂ ಉತ್ತರ ಕನ್ನಡ, ಧಾರವಾಡ, ಗದಗ ಮತ್ತು ಹಾವೇರಿ, ದಾವಣಗೆರೆ, ವಿಜಯನಗರ ಜಿಲ್ಲೆಗಳಲ್ಲಿ ಯೆಲ್ಲೋ ಅಲರ್ಟ್ ಘೋಷಿಸಲಾಗಿದೆ.

ಈ ಸಂಗತಿಯ ಕುರಿತು ನಿಮ್ಮ ಅನಿಸಿಕೆ ಏನು? ಕಾಮೆಂಟ್ ಮೂಲಕ ತಿಳಿಸಿ

Continue Reading
Advertisement
Prajwal Revanna Case
ಪ್ರಮುಖ ಸುದ್ದಿ3 hours ago

Prajwal Revanna Case : ಜರ್ಮನಿಯಿಂದ ಭಾರತಕ್ಕೆ ಬರಲು ವಿಮಾನ ಟಿಕೆಟ್ ಬುಕ್ ಮಾಡಿದ ಪ್ರಜ್ವಲ್ ರೇವಣ್ಣ

chakravarthy sulibele
ಕರ್ನಾಟಕ4 hours ago

Chakravarthy Sulibele : ಮಂಡಿಯೂರಿ ಭೈರಪ್ಪ ಅವರಿಂದ ಸಾವರ್ಕರ್ ಪ್ರಶಸ್ತಿ ಸ್ವೀಕರಿಸಿದ ಚಕ್ರವರ್ತಿ ಸೂಲಿಬೆಲೆ

Cyber Crime
ಪ್ರಮುಖ ಸುದ್ದಿ4 hours ago

Cyber Crime : ಹೆಣ್ಣು ಮಕ್ಕಳ ಫೋಟೋ ಅಶ್ಲೀಲಗೊಳಿಸಿ ಪೋಸ್ಟ್​ ಮಾಡುತ್ತಿದ್ದವನ ಬಂಧನ

Bomb Threat
ಪ್ರಮುಖ ಸುದ್ದಿ5 hours ago

Bomb Threat : ತೆಲಂಗಾಣ ಡಿಸಿಎಂ ಮನೆಗೆ ಬಾಂಬ್​ ಬೆದರಿಕೆ; ಆತಂಕ

Acid attack
ಕರ್ನಾಟಕ5 hours ago

Acid attack: ಮನೆ ಬಾಗಿಲು ತೆರೆಯದ ಹಿನ್ನೆಲೆ ವಿವಾಹಿತ ಪ್ರಿಯತಮೆಗೆ ಆ್ಯಸಿಡ್ ಎರಚಿದ ಪ್ರಿಯಕರ!

Cab service
ಪ್ರಮುಖ ಸುದ್ದಿ5 hours ago

Cab Service : ಆ್ಯಪ್​ ಆಧಾರಿತ ಕ್ಯಾಬ್​ಗಳು ಶೇ. 5ಕ್ಕಿಂತ ಹೆಚ್ಚು ಸೇವಾ ಶುಲ್ಕ ವಿಧಿಸುವಂತಿಲ್ಲ; ಸರ್ಕಾರದ ಆದೇಶಕ್ಕೆ ಕೋರ್ಟ್​ ಮನ್ನಣೆ

Gauri Khan
ಸಿನಿಮಾ6 hours ago

Gauri Khan: ಇಸ್ಲಾಂಗೆ ಮತಾಂತರ ಆಗದೇ ಇರಲು ಕಾರಣ ತಿಳಿಸಿದ ಶಾರುಖ್ ಖಾನ್ ಪತ್ನಿ ಗೌರಿ!

Veer Savarkar flyover
ಕರ್ನಾಟಕ6 hours ago

Veer Savarkar flyover: ಸಾವರ್ಕರ್ ಸೇತುವೆಯ ನಾಮಫಲಕಕ್ಕೆ ಮಸಿ ಬಳಿದಿರೋದು ಅತ್ಯಂತ ಖಂಡನೀಯ: ವಿಜಯೇಂದ್ರ

Lok Sabha Election
ಪ್ರಮುಖ ಸುದ್ದಿ6 hours ago

Lok Sabha Election : ಷೇರು ಮಾರುಕಟ್ಟೆ ಸಂಸ್ಥೆಯ ಪ್ರಕಾರ ಬಿಜೆಪಿ ಕಳೆದ ಬಾರಿಗಿಂತ ಹೆಚ್ಚು ಸೀಟು ಗೆಲ್ಲಲಿದೆ; ಲೆಕ್ಕಾಚಾರ ಹೀಗಿದೆ

Robbery Case Two accused arrested by yallapur police
ಕರ್ನಾಟಕ6 hours ago

Robbery Case: ಅರಬೈಲ್ ಘಟ್ಟದಲ್ಲಿ ಕಾರು ಅಡ್ಡಗಟ್ಟಿ ದರೋಡೆ; ಇಬ್ಬರು ಆರೋಪಿಗಳ ಬಂಧನ

Sharmitha Gowda in bikini
ಕಿರುತೆರೆ8 months ago

Geetha Serial Kannada: ನಿದ್ದೆ ಕದ್ದ ಚೋರಿ! ನಟಿ `ಭಾನುಮತಿ’ ಹಾಟ್‌ ಪೋಟೊಗಳಿಗೆ ಫ್ಯಾನ್ಸ್ ಫುಲ್ ಫಿದಾ

Kannada Serials
ಕಿರುತೆರೆ8 months ago

Kannada Serials TRP: 2ನೇ ಸ್ಥಾನದಲ್ಲಿ 2 ಧಾರಾವಾಹಿಗಳು; ಟಿಆರ್‌ಪಿ ರೇಸ್‌ನಲ್ಲಿಲ್ಲ ಭಾಗ್ಯಲಕ್ಷ್ಮೀ!

Bigg Boss- Saregamapa 20 average TRP
ಕಿರುತೆರೆ7 months ago

Kannada Serials TRP: ಏಳನೇ ಸ್ಥಾನಕ್ಕೆ ʻಅಮೃತಧಾರೆʼ ಕುಸಿತ; ಬಿಗ್‌ ಬಾಸ್‌-ಸರಿಗಮಪ ಟಿಆರ್‌ಪಿ ಎಷ್ಟು?

galipata neetu
ಕಿರುತೆರೆ6 months ago

Kanyadana Serial: ಕಿರುತೆರೆಗೆ ಮತ್ತೆ ಎಂಟ್ರಿ ಕೊಟ್ಟ ʻಗಾಳಿಪಟʼ ಖ್ಯಾತಿಯ ʻನೀತುʼ!

Kannada Serials
ಕಿರುತೆರೆ8 months ago

Kannada Serials TRP: ನಾಲ್ಕನೇ ಸ್ಥಾನಕ್ಕೆ ಕುಸಿತ ಕಂಡ ʻಸೀತಾ ರಾಮʼ; ಟಿಆರ್‌ಪಿ ರೇಸ್‌ಗೆ ʻಭಾಗ್ಯಲಕ್ಷ್ಮಿʼ ಬ್ಯಾಕ್‌!

Kannada Serials
ಕಿರುತೆರೆ8 months ago

Kannada Serials TRP: ಟಿಆರ್‌ಪಿಯಲ್ಲಿ ʻಭಾಗ್ಯಲಕ್ಷ್ಮೀʼ ಹವಾ; ʻಪುಟ್ಟಕ್ಕನ ಮಕ್ಕಳುʼ ಧಾರಾವಾಹಿಗೆ ಸಂಕಷ್ಟ!

Bigg Boss' dominates TRP; Sita Rama fell to the sixth position
ಕಿರುತೆರೆ7 months ago

Kannada Serials TRP: ಟಿಆರ್‌ಪಿಯಲ್ಲಿ ʻಬಿಗ್ ಬಾಸ್ʼದೇ ಮೇಲುಗೈ; 6ನೇ ಸ್ಥಾನಕ್ಕೆ ಕುಸಿದ ʻಸೀತಾ ರಾಮʼ

geetha serial Dhanush gowda engagement
ಕಿರುತೆರೆ5 months ago

Dhanush Gowda: ಗೀತಾ ಧಾರಾವಾಹಿ ನಟನ ನಿಶ್ಚಿತಾರ್ಥ; ಭವ್ಯಾಳ ಕಮೆಂಟ್‌ ಬಾಕ್ಸ್‌ ಆಫ್‌!

varun
ಕಿರುತೆರೆ6 months ago

Brindavana Serial: ʼಬೃಂದಾವನʼ ಧಾರಾವಾಹಿಯಲ್ಲಿ ದೊಡ್ಡ ಟ್ವಿಸ್ಟ್‌; ಪ್ರಮುಖ ಪಾತ್ರಧಾರಿಯೇ ಬದಲು

Kannada Serials
ಕಿರುತೆರೆ9 months ago

Kannada Serials TRP: ಟಿಆರ್‌ಪಿಯಲ್ಲಿ ಏರಿಕೆ ಕಂಡ ʻಅಮೃತಧಾರೆʼ; ʻಗಟ್ಟಿಮೇಳʼಕ್ಕೆ ನಾಲ್ಕನೇ ಸ್ಥಾನ!

Karnataka weather Forecast
ಮಳೆ7 hours ago

Karnataka Weather : ಚಿಕ್ಕಮಗಳೂರಲ್ಲಿ ಭಾರಿ ಮಳೆ; ಯಾದಗಿರಿಯಲ್ಲಿ ಕರೆಂಟ್‌ ಕಟ್‌, ಜನರೇಟರ್‌ನಿಂದ ಮೊಬೈಲ್‌ಗಳಿಗೆ ಚಾರ್ಜಿಂಗ್‌!

tumkur murder
ತುಮಕೂರು16 hours ago

Tumkur Murder : ಮಗುವಿನ ಮುಂದೆಯೇ ಹೆಂಡತಿಯ ಕತ್ತು, ದೇಹವನ್ನು ಕತ್ತರಿಸಿ ಬಿಸಾಡಿದ ದುಷ್ಟ

Karnataka Weather Forecast
ಮಳೆ1 day ago

Karnataka Weather : ಕಡಲತೀರದಲ್ಲಿ ಅಲೆಗಳ ಅಬ್ಬರ, ಪ್ರವಾಸಿಗರಿಗೆ ಕಟ್ಟೆಚ್ಚರ; ನಾಳೆಯೂ ಗಾಳಿ ಸಹಿತ ಮಳೆ ಅಬ್ಬರ

Karnataka Rain
ಮಳೆ2 days ago

Karnataka Rain : ಯಾದಗಿರಿಯಲ್ಲಿ ಬಿರುಗಾಳಿ ಸಹಿತ ಮಳೆ; ಸಿಡಿಲು ಬಡಿದು ಎಮ್ಮೆಗಳು ಸಾವು

Basavanagudi News
ಬೆಂಗಳೂರು2 days ago

Basavanagudi News : ಪೂಜಾ ಸಾಮಗ್ರಿಗೆ ಒನ್‌ ಟು ಡಬಲ್‌ ರೇಟ್‌; ದೊಡ್ಡ ಗಣಪತಿ ದೇಗುಲದಲ್ಲಿ ಕೈ ಕೈ ಮಿಲಾಯಿಸಿದ ಭಕ್ತರು-ವ್ಯಾಪಾರಿಗಳು

Karnataka Rain
ಮಳೆ3 days ago

Karnataka Rain : ಭಾರಿ ಮಳೆಗೆ ರಸ್ತೆ ಕಾಣದೆ ರಾಜಕಾಲುವೆಗೆ ಉರುಳಿದ ಆಟೋ; ಚಾಲಕ ಸ್ಥಳದಲ್ಲೇ ಸಾವು

dina bhavishya read your daily horoscope predictions for May 23 2024
ಭವಿಷ್ಯ6 days ago

Dina Bhavishya : 12 ರಾಶಿಯವರ ಇಂದಿನ ಭವಿಷ್ಯ ಹೇಗಿದೆ? ಯಾರಿಗೆ ಶುಭ, ಯಾರಿಗೆ ಅಶುಭ ಫಲ?

Karnataka Weather Forecast
ಮಳೆ7 days ago

Karnataka Weather : ಮುಂದುವರಿಯಲಿದೆ ವರುಣಾರ್ಭಟ; ಬೆಂಗಳೂರಲ್ಲೂ ಭಾರಿ ಮಳೆ ನಿರೀಕ್ಷೆ!

Karnataka Rain
ಮಳೆ1 week ago

Karnataka Rain : ಭಾರಿ ಮಳೆಗೆ ಕರೆಂಟ್‌ ಕಟ್‌, ಕತ್ತಲಲ್ಲೇ ರೋಗಿಗಳಿಗೆ ಟ್ರೀಟ್‌ಮೆಂಟ್‌; ಮರ ಬಿದ್ದರೂ ಪಾರಾದ ತಾಯಿ-ಮಗ

Love Case Father throws hot water on man who loved his daughter for coming home
ಕೊಡಗು1 week ago

Love Case : ಮನೆಗೆ ಬಂದ ಪ್ರೇಮಿಗೆ ಕೊತ ಕೊತ ಕುದಿಯುವ ನೀರು ಎರಚಿದ ಯುವತಿ ತಂದೆ!

ಟ್ರೆಂಡಿಂಗ್‌