Lok Sabha Election 2024: ವಿಧಾನ ಪರಿಷತ್‌ಗೆ ಈಶ್ವರಪ್ಪ ಪುತ್ರ ಕೆ.ಇ. ಕಾಂತೇಶ್‌: ಸುಳಿವು ಕೊಟ್ಟ ಬಿಎಸ್‌ವೈ - Vistara News

Lok Sabha Election 2024

Lok Sabha Election 2024: ವಿಧಾನ ಪರಿಷತ್‌ಗೆ ಈಶ್ವರಪ್ಪ ಪುತ್ರ ಕೆ.ಇ. ಕಾಂತೇಶ್‌: ಸುಳಿವು ಕೊಟ್ಟ ಬಿಎಸ್‌ವೈ

Lok Sabha Election 2024: ಹಾವೇರಿ ಲೋಕಸಭಾ ಕ್ಷೇತ್ರದ ಮೇಲೆ ಕಣ್ಣಿಟ್ಟಿದ್ದ ಕೆ.ಎಸ್.‌ ಈಶ್ವರಪ್ಪ ಅವರಿಗೆ ನಿರಾಸೆಯಾಗಿತ್ತು. ಇದರಿಂದ ಅವರು ರೊಚ್ಚಿಗೆದ್ದು, ಬಿಎಸ್‌ವೈ ವಿರುದ್ಧ ಸಮರ ಸಾರಿದ್ದರು. ಶಿವಮೊಗ್ಗ ಲೋಕಸಭಾ ಕ್ಷೇತ್ರದಿಂದ ಪಕ್ಷೇತರವಾಗಿ ನಿಲ್ಲುವ ಬೆದರಿಕೆಯನ್ನೂ ಒಡ್ಡಿದ್ದರು. ಈಗ ಕಾಂತೇಶ್‌ ಅವರನ್ನು ಪರಿಷತ್‌ಗೆ ಆಯ್ಕೆ ಮಾಡುವ ಬಗ್ಗೆ ಯಡಿಯೂರಪ್ಪ ಸುಳಿವು ನೀಡಿದ್ದಾರೆ.

VISTARANEWS.COM


on

KS Eshwarappa Shivamogga
ಮಹತ್ವದ, ಕುತೂಹಲಕರ ಸುದ್ದಿಗಾಗಿ ಫಾಲೊ ಮಾಡಿ
Koo

ಬೆಂಗಳೂರು: ಲೋಕಸಭಾ ಚುನಾವಣೆ (Lok Sabha Election 2024) ಹಿನ್ನೆಲೆಯಲ್ಲಿ ಹಾವೇರಿ ಲೋಕಸಭಾ ಕ್ಷೇತ್ರದಿಂದ (Haveri Lok Sabha constituency) ಪುತ್ರ ಕೆ.ಇ. ಕಾಂತೇಶ್‌ಗೆ (KE Kantesh) ಟಿಕೆಟ್‌ ಮಿಸ್‌ ಆಗಿದ್ದರಿಂದ ಈಗ ಮಾಜಿ ಸಚಿವ ಕೆ.ಎಸ್.‌ ಈಶ್ವರಪ್ಪ (KS Eshwarappa) ಕೆಂಡವಾಗಿದ್ದಾರೆ. ಪಕ್ಷದ ವರಿಷ್ಠರ ನಿರ್ಧಾರ ಹಾಗೂ ಮಾಜಿ ಸಿಎಂ ಬಿ.ಎಸ್.‌ ಯಡಿಯೂರಪ್ಪ ವಿರುದ್ಧ ಬಹಿರಂಗವಾಗಿಯೇ ವಾಗ್ದಾಳಿ ನಡೆಸಿದ್ದಾರೆ. ಈಗ ಅವರ ಶಮನ ಕಾರ್ಯಕ್ಕೆ ಬಿಜೆಪಿ ಮುಂದಾಗುತ್ತಿದೆ. ಈ ವೇಳೆ ಮಾಧ್ಯಮದವರೊಂದಿಗೆ ಮಾತನಾಡಿದ ಮಾಜಿ ಸಿಎಂ ಬಿ.ಎಸ್.‌ ಯಡಿಯೂರಪ್ಪ, ಕಾಂತೇಶ್‌ ಅವರನ್ನು ವಿಧಾನ ಪರಿಷತ್‌ಗೆ ಆಯ್ಕೆ ಮಾಡುವ ಸುಳಿವನ್ನು ನೀಡಿದ್ದಾರೆ.

ಲೋಕಸಭಾ ಚುನಾವಣೆ ಹಿನ್ನೆಲೆಯಲ್ಲಿ ಬಿಜೆಪಿ ಕಾರ್ಯತಂತ್ರ ಚುರುಕುಗೊಂಡಿದೆ. ಈ ಬಾರಿ ಶತಾಯಗತಾಯ 28ಕ್ಕೆ 28 ಕ್ಷೇತ್ರಗಳನ್ನೂ ಗೆಲ್ಲಬೇಕು ಎಂಬ ನಿಟ್ಟಿನಲ್ಲಿ ಜೆಡಿಎಸ್‌ ಜತೆ ಮೈತ್ರಿ ಮಾಡಿಕೊಂಡಿದೆ. ಅಲ್ಲದೆ, ತನ್ನ ಪಾಲಿನ ಕ್ಷೇತ್ರಗಳಲ್ಲಿ ಯಾರನ್ನು ಅಭ್ಯರ್ಥಿಯನ್ನಾಗಿ ಮಾಡಬೇಕು ಎಂಬ ನಿಟ್ಟಿನಲ್ಲಿ ಅಳೆದೂ ತೂಗಿ ನಿರ್ಧಾರವನ್ನು ತೆಗೆದುಕೊಂಡಿದೆ. ಅಲ್ಲದೆ, 8 ಹಾಲಿ ಸಂಸದರನ್ನು ಬದಲಾವಣೆ ಮಾಡಿದೆ. ಈ ವೇಳೆ ಹಾವೇರಿ ಲೋಕಸಭಾ ಕ್ಷೇತ್ರದ ಮೇಲೆ ಕಣ್ಣಿಟ್ಟಿದ್ದ ಕೆ.ಎಸ್.‌ ಈಶ್ವರಪ್ಪ ಅವರಿಗೆ ನಿರಾಸೆಯಾಗಿತ್ತು. ಇದರಿಂದ ಅವರು ರೊಚ್ಚಿಗೆದ್ದು, ಬಿಎಸ್‌ವೈ ವಿರುದ್ಧ ಸಮರ ಸಾರಿದ್ದರು. ಶಿವಮೊಗ್ಗ ಲೋಕಸಭಾ ಕ್ಷೇತ್ರದಿಂದ ಪಕ್ಷೇತರವಾಗಿ ನಿಲ್ಲುವ ಬೆದರಿಕೆಯನ್ನೂ ಒಡ್ಡಿದ್ದರು. ಈಗ ಬಿ.ಎಸ್.‌ ಯಡಿಯೂರಪ್ಪ ಅವರು ಖುದ್ದು ತಾವೇ ಈಶ್ವರಪ್ಪ ಅವರ ಜತೆ ಮಾತನಾಡುವುದಾಗಿ ಹೇಳಿದ್ದಾರೆ.

ಯಡಿಯೂರಪ್ಪ ಹೇಳಿದ್ದೇನು?

ಟಿಕೆಟ್ ಕೊಡುವ ವಿಚಾರದಲ್ಲಿ ಬಿ.ಎಸ್.‌ ಯಡಿಯೂರಪ್ಪ ಅವರು ನುಡಿದಂತೆ ನಡೆದುಕೊಳ್ಳಲಿಲ್ಲ ಎಂದು ಕೆ.ಎಸ್. ಈಶ್ವರಪ್ಪ ವಾಗ್ದಾಳಿ ನಡೆಸಿದ ವಿಚಾರಕ್ಕೆ ಪ್ರತಿಕ್ರಿಯೆ ನೀಡಿದ ಬಿಎಸ್‌ವೈ, ಈಶ್ವರಪ್ಪ ಅವರ ಜತೆ ಮಾತನಾಡುತ್ತೇನೆ. ಅಲ್ಲದೆ, ಹೈಕಮಾಂಡ್ ನಾಯಕರು ಸಹ ಮಾತನಾಡಲಿದ್ದಾರೆ. ಅವರ ಮಗನನ್ನು ಎಂಎಲ್‌ಸಿ ಮಾಡಲಿದ್ದಾರೆ ಎಂದು ಹೇಳಿದರು. ಈ ಮೂಲಕ ಕಾಂತೇಶ್‌ಗೆ ಎಂಎಲ್‌ಸಿ ಮಾಡುವ ಸುಳಿವನ್ನು ಯಡಿಯೂರಪ್ಪ ನೀಡಿದ್ದಾರೆ.

ಇದನ್ನೂ ಓದಿ: ‌Lok Sabha Election 2024: ಪ್ರತಾಪ್‌ ಸಿಂಹ, ಕರಡಿ, ಡಿವಿಎಸ್‌ಗೆ ಕಾಂಗ್ರೆಸ್‌ನಿಂದ ಟಿಕೆಟ್‌? ಏನಿದು ಡಿಕೆಶಿ ಪ್ಲ್ಯಾನ್?

ಯದುವೀರ್‌ ಸ್ಪರ್ಧೆಯಿಂದ ಏನು ಲಾಭ ಎಂದು ವಿವರಿಸಿದ ಬಿಎಸ್‌ವೈ

ಮೈಸೂರು ಕ್ಷೇತ್ರದಲ್ಲಿ ಹಾಲಿ ಸಂಸದ ಪ್ರತಾಪ್‌ ಸಿಂಹ ಬದಲಾಗಿ ಮಹಾರಾಜ ಯದುವೀರ್‌ ಒಡೆಯರ್‌ ಬಿಜೆಪಿಯಿಂದ ಸ್ಪರ್ಧೆ ಮಾಡುತ್ತಿದ್ದಾರೆ. ಇದರಿಂದ ಬಿಜೆಪಿಗೆ ಏನು ಲಾಭ ಎಂಬ ಬಗ್ಗೆ ಬಿ.ಎಸ್.‌ ಯಡಿಯೂರಪ್ಪ ಅವರು ಪ್ರತಿಕ್ರಿಯೆ ನೀಡಿದ್ದು, ಯದುವೀರ್‌ ಅವರದ್ದು ಮೈಸೂರಿನ ರಾಜಕುಟುಂಬವಾಗಿದೆ. ಅವರನ್ನು ಮೈಸೂರು -ಕೊಡುಗು ಕ್ಷೇತ್ರದ ಅಭ್ಯರ್ಥಿಯನ್ನಾಗಿ ತೀರ್ಮಾನ ಮಾಡಲಾಗಿದೆ. ಇದರಿಂದ ಆರೇಳು ಕ್ಷೇತ್ರಗಳಿಗೆ ಅನುಕೂಲ ಆಗುವ ವಿಶ್ವಾಸ ಇದೆ. ನಾವು ರಾಜ್ಯದಲ್ಲಿ ಕನಿಷ್ಠ 25 – 26 ಕ್ಷೇತ್ರಗಳನ್ನು ಗೆಲ್ಲಬೇಕು ಎಂದು ಗುರಿಯನ್ನು ಇಟ್ಟುಕೊಂಡಿದ್ದೇವೆ. ಅದಕ್ಕೆ ಪಕ್ಷದ ಹಾಗೂ ವೈಯಕ್ತಿಕವಾಗಿ ಸ್ವಾಗತ ಮಾಡುತ್ತೇನೆ ಎಂದು ಹೇಳಿದರು.

ಕ್ಷಣ ಕ್ಷಣದ ಮಾಹಿತಿಗಾಗಿ Vistara News FaceBook ಪೇಜ್ ಫಾಲೋ ಮಾಡಿ
ಮಹತ್ವದ ಮಾಹಿತಿಗಾಗಿ ವಿಸ್ತಾರ ನ್ಯೂಸ್ ಆ್ಯಪ್ ಉಚಿತವಾಗಿ ಡೌನ್ ಲೋಡ್ ಮಾಡಿಕೊಳ್ಳಿ: Andriod App | IOS App
Continue Reading
Click to comment

Leave a Reply

Your email address will not be published. Required fields are marked *

Lok Sabha Election 2024

PM Modi: ಕನ್ಯಾಕುಮಾರಿಯಲ್ಲಿ ಪ್ರಧಾನಿ ಧ್ಯಾನ; ಪ್ರಧಾನಿ ಈ ಸ್ಥಳವನ್ನೇ ಆಯ್ಕೆ ಮಾಡಲು ಏನು ಕಾರಣ?

ಪ್ರಧಾನಿ ನರೇಂದ್ರ ಮೋದಿ (PM Modi) ಅವರು ಈ ಬಾರಿ ಲೋಕ ಸಭಾ ಚುನಾವಣಾ ಪ್ರಚಾರದ ಅಂತ್ಯವನ್ನು ಕನ್ಯಾಕುಮಾರಿಯ ಸ್ವಾಮಿ ವಿವೇಕಾನಂದ ಕಲ್ಲಿನ ಸ್ಮಾರಕದಲ್ಲಿ ನಡೆಸಲಿದ್ದಾರೆ. ಇಲ್ಲಿ ಸುಮಾರು 45 ಗಂಟೆಗಳ ಕಾಲ ಅವರು ಕಳೆಯಲಿದ್ದಾರೆ.

VISTARANEWS.COM


on

By

PM Modi
Koo

ಲೋಕಸಭಾ ಚುನಾವಣೆ- 2024ರ (Loksabha election-2024) ಬಿಜೆಪಿ ಪ್ರಚಾರ ಕಾರ್ಯವನ್ನು ಅಂತ್ಯಗೊಳಿಸಿ ಪ್ರಧಾನಿ ನರೇಂದ್ರ ಮೋದಿ (PM Modi) ಅವರು ಕನ್ಯಾಕುಮಾರಿಗೆ ತೆರಳಲಿದ್ದು, ( Kanyakumari) ಇಲ್ಲಿನ ವಿವೇಕಾನಂದ ಕಲ್ಲಿನ ಸ್ಮಾರಕದಲ್ಲಿ (Vivekananda Rock Memorial) ಮೇ 30ರಿಂದ ಜೂನ್ 1ರವರೆಗೆ ಒಟ್ಟು 45 ಗಂಟೆಗಳ ಕಾಲ ಧ್ಯಾನ ಮಾಡಲಿದ್ದಾರೆ.

ಇದೇ ಸ್ಥಳದಲ್ಲಿ ಭಾರತದ ಆಧ್ಯಾತ್ಮಿಕ ನಾಯಕ ಸ್ವಾಮಿ ವಿವೇಕಾನಂದರು 1892ರಲ್ಲಿ ಮೂರು ದಿನಗಳ ಕಾಲ ಧ್ಯಾನ ಮಾಡಿ ಜ್ಞಾನೋದಯವನ್ನು ಪಡೆದಿದ್ದರು.

2019ರ ಚುನಾವಣಾ ಪ್ರಚಾರದ ಕೊನೆಯಲ್ಲಿ ಪ್ರಧಾನಿ ಮೋದಿ ಅವರು ಉತ್ತರಾಖಂಡದ ಕೇದಾರನಾಥ ದೇಗುಲಕ್ಕೆ ಭೇಟಿ ನೀಡಿ 15 ಗಂಟೆಗಳ ‘ಏಕಾಂತವಾಸ್’ (ಏಕಾಂತ ಧ್ಯಾನ) ಕೈಗೊಂಡಿದ್ದರು.

2014 ರಲ್ಲಿ ಮಹಾರಾಷ್ಟ್ರದ ಪ್ರತಾಪಗಢಕ್ಕೆ ಪ್ರಧಾನಿ ಮೋದಿ ಭೇಟಿ ನೀಡಿದರು. 1659ರ ನವೆಂಬರ್ ನಲ್ಲಿ ಬಿಜಾಪುರದ ಆದಿಲ್ ಶಾಹಿ ಸುಲ್ತಾನರ ಸೇನಾಪತಿ ಅಫ್ಜಲ್ ಖಾನ್ ಅವರನ್ನು ಕೊಂದು ಯುದ್ಧದಲ್ಲಿ ಗೆದ್ದ ಛತ್ರಪತಿ ಶಿವಾಜಿಗೆ ಗೌರವ ಸಲ್ಲಿಸಿದರು. ಈ ವಿಜಯವು ಮರಾಠಾ ಸಾಮ್ರಾಜ್ಯದ ಮುಖ್ಯಸ್ಥನಾಗಿ ಶಿವಾಜಿಯ ಪಟ್ಟಾಭಿಷೇಕಕ್ಕೆ ದಾರಿ ಮಾಡಿಕೊಟ್ಟಿತು. ಇದನ್ನು ಹಿಂದವಿ ಸ್ವರಾಜ್ ಎಂದು ಛತ್ರಪತಿ ಶಿವಾಜಿ ಕರೆದರು.

ಇದೀಗ ಜೂನ್ 4 ರಂದು ಪ್ರಕಟವಾಗಲಿರುವ ಲೋಕಸಭಾ ಚುನಾವಣೆಯ ಫಲಿತಾಂಶಕ್ಕೆ ಮುಂಚಿತವಾಗಿ ಮೋದಿ ಕನ್ಯಾಕುಮಾರಿ ಪ್ರವಾಸ ಯೋಜನೆ ಹಾಕಿಕೊಂಡಿದ್ದಾರೆ.


ವಿವೇಕಾನಂದ ಬಂಡೆಯ ಮಹತ್ವ ಏನು?

ಹಿಂದೂ ಮಹಾಸಾಗರ, ಅರಬ್ಬೀ ಸಮುದ್ರ ಮತ್ತು ಬಂಗಾಳಕೊಲ್ಲಿಯ ಸಂಗಮದಲ್ಲಿರುವ ಭಾರತದ ದಕ್ಷಿಣ ತುದಿಯಾದ ಕನ್ಯಾಕುಮಾರಿಯ ವವತುರೈ ಕಡಲತೀರದಿಂದ ಸುಮಾರು 500 ಮೀಟರ್ ದೂರದಲ್ಲಿರುವ ಈ ದ್ವೀಪದ ಮೇಲೆ ಧ್ಯಾನ ಮಾಡುವಾಗ ಸ್ವಾಮಿ ವಿವೇಕಾನಂದರು ಅಭಿವೃದ್ಧಿ ಹೊಂದಿದ ಭಾರತದ ಕನಸು ಕಂಡಿದ್ದರು.

ಭಾರತದಾದ್ಯಂತ ನಾಲ್ಕು ವರ್ಷಗಳ ಕಾಲ ಅಲೆದಾಡಿದ ಅವರು ದೈವಿಕ ಸ್ವಭಾವ, ಸತ್ಯ, ಶುದ್ಧತೆ, ಪ್ರಾಮಾಣಿಕತೆ, ಪರಿಶ್ರಮ, ಧೈರ್ಯ, ಶಕ್ತಿ ಮತ್ತು ಪ್ರೀತಿಯಲ್ಲಿ ನಂಬಿಕೆಯ ಇಡುವ ತತ್ತ್ವವನ್ನು ಸಾರಿದರು.

ಸ್ವಾಮಿ ರಾಮಕೃಷ್ಣಾನಂದರಿಗೆ 1894ರಲ್ಲಿ ವಿವೇಕಾನಂದರು, ಭಾರತೀಯ ಬಂಡೆಯ ಕೊನೆಯ ತುಣುಕಿನ ಮೇಲೆ ಕುಳಿತು ನಾನು ಒಂದು ಯೋಜನೆಯನ್ನು ಕಂಡಿದ್ದೇನೆ. ಸನ್ಯಾಸಿಗಳು ಅಲೆದಾಡುತ್ತಾ ಜನರಿಗೆ ಆಧ್ಯಾತ್ಮಿಕತೆಯನ್ನು ಕಲಿಸುವುದು ಹುಚ್ಚುತನ. ಬಡವರು ಅತ್ಯಂತ ಕಷ್ಟವಾದ ಜೀವನ ನಡೆಸುತ್ತಿರುವುದು ಅವರ ಅಜ್ಞಾನದಿಂದಾಗಿ. ನಾವು ಅದನ್ನು ಹೋಗಲಾಡಿಸುವ ಬದಲು ಅವರ ರಕ್ತವನ್ನು ಹೀರುತ್ತಿದ್ದೇವೆ ಮತ್ತು ಅವರನ್ನು ಪಾದದಡಿಯಲ್ಲಿ ತುಳಿಯುತ್ತಿದ್ದೇವೆ ಎಂದು ಹೇಳಿದ್ದರು.

1963ರಲ್ಲಿ ಸ್ವಾಮಿ ವಿವೇಕಾನಂದರ ಜನ್ಮ ಶತಮಾನೋತ್ಸವದ ಮುನ್ನಾದಿನ ಆರ್‌ಎಸ್‌ಎಸ್ ಕಾರ್ಯಕರ್ತ ಏಕನಾಥ್ ರಾನಡೆ ನೇತೃತ್ವದ ವಿವೇಕಾನಂದ ರಾಕ್ ಸ್ಮಾರಕ ಸಮಿತಿಯು ಈ ಸ್ಥಳವನ್ನು ನೆನಪಿಸಿತ್ತು. ಇದನ್ನು 1970 ರಲ್ಲಿ ರಾಷ್ಟ್ರಪತಿ ವಿ.ವಿ.ಗಿರಿ ಅವರು ಔಪಚಾರಿಕವಾಗಿ ಉದ್ಘಾಟಿಸಿದರು.

ಒಂದು ನಂಬಿಕೆಯ ಪ್ರಕಾರ ಪಾರ್ವತಿ ದೇವಿಯು ಶಿವನಿಗಾಗಿ ಕಾಯುತ್ತಿರುವಾಗ ಇದೇ ಬಂಡೆಯ ಮೇಲೆ ಒಂದೇ ಕಾಲಿನ ಮೇಲೆ ಧ್ಯಾನ ಮಾಡುತ್ತಿದ್ದಳು.

ವವತುರೈನಿಂದ 15 ನಿಮಿಷಗಳ ದೋಣಿ ಸಂಚಾರದ ಮೂಲಕ ಕಲ್ಲಿನ ದ್ವೀಪವನ್ನು ಪ್ರವೇಶಿಸಬಹುದು. ಇದು ಹಿಂದೂ ಮಹಾಸಾಗರ, ಬಂಗಾಳ ಕೊಲ್ಲಿ ಮತ್ತು ಅರೇಬಿಯನ್ ಸಮುದ್ರದ ಸಂಗಮ ಸ್ಥಳವಾಗಿದೆ.


ಮೋದಿ ಈ ಸ್ಥಳ ಆಯ್ಕೆ ಮಾಡಿದ್ದು ಯಾಕೆ?

ಪ್ರಧಾನಿ ನರೇಂದ್ರ ಮೋದಿ ಅವರು ವಿವೇಕಾನಂದ ಅವರನ್ನು ತಮ್ಮ ಜೀವನಕ್ಕೆ ಆದರ್ಶ ಎಂದು ಪರಿಗಣಿಸುತ್ತಾರೆ. ಸ್ವಾಮಿ ವಿವೇಕಾನಂದರು ಸ್ಥಾಪಿಸಿರುವ ರಾಮಕೃಷ್ಣ ಮಿಷನ್‌ನ ಸದಸ್ಯರೂ ಆಗಿದ್ದಾರೆ.

ಕಳೆದ ವರ್ಷ ರಾಮಕೃಷ್ಣ ಮಿಷನ್‌ನ 125 ನೇ ವಾರ್ಷಿಕೋತ್ಸವದ ಸಮಾರಂಭದಲ್ಲಿ ಮೋದಿ, ಸ್ವಾಮಿ ವಿವೇಕಾನಂದರು ಭಾರತದ ಬಗ್ಗೆ ಕಂಡಿರುವ ಕನಸನ್ನು ನನಸು ಮಾಡಲು ಭಾರತವು ಕೆಲಸ ಮಾಡುವುದನ್ನು ಅವರು ಹೆಮ್ಮೆಯಿಂದ ನೋಡುತ್ತಿದ್ದಾರೆ ಎಂದು ನನಗೆ ಖಾತ್ರಿಯಿದೆ ಎಂದು ಹೇಳಿದ್ದರು.

ಈ ಬಾರಿ ತಮಿಳುನಾಡಿನ ಕನ್ಯಾಕುಮಾರಿಯನ್ನು ಅವರು ಧ್ಯಾನ ಮಾಡಲು ಅವರು ಆಯ್ಕೆ ಮಾಡಿರುವುದು ಈ ವರ್ಷದ ಚುನಾವಣಾ ಪ್ರಚಾರದ ಸಮಯದಲ್ಲಿ ಅವರ ಪಕ್ಷ ದಕ್ಷಿಣ ಭಾರತದಲ್ಲಿ ಬಲವಾಗಿರುವುದನ್ನು ಸೂಚಿಸುತ್ತದೆ. ಕಳೆದ ಮೂರು ವರ್ಷಗಳಲ್ಲಿ ಅವರ ಒಟ್ಟು ಪ್ರವಾಸಗಳಲ್ಲಿ ಮೂರನೇ ಒಂದು ಭಾಗದಷ್ಟು ಅವರು ದಕ್ಷಿಣ ಭಾರತಕ್ಕೆ ಪ್ರವಾಸ ಕೈಗೊಂಡಿದ್ದರು. 2024ರಲ್ಲಿ ತಮಿಳುನಾಡಿಗೆ ಏಳು ಭಾರಿ ಭೇಟಿ ನೀಡಿದ್ದಾರೆ.

ದಕ್ಷಿಣದ ರಾಜ್ಯಗಳ ಮೇಲೆ ದೃಷ್ಟಿ

ಕೇರಳ, ತಮಿಳುನಾಡು, ಆಂಧ್ರ ಪ್ರದೇಶ, ತೆಲಂಗಾಣ ಮತ್ತು ಕರ್ನಾಟಕವು ಒಟ್ಟು 543 ಲೋಕಸಭಾ ಸ್ಥಾನಗಳಲ್ಲಿ 131 ಸ್ಥಾನಗಳನ್ನು ಹೊಂದಿವೆ. ತಮಿಳುನಾಡುವೊಂದೇ ಸಂಸತ್ತಿನಲ್ಲಿ 39 ಸ್ಥಾನಗಳನ್ನು ಹೊಂದಿದೆ. ದಕ್ಷಿಣದಲ್ಲಿ ಬಿಜೆಪಿ ಏಕೈಕ ದೊಡ್ಡ ಪಕ್ಷವಾಗಿ ಹೊರಹೊಮ್ಮಲಿದೆ ಎಂದು ಪ್ರಧಾನಿ ಮೋದಿ ವಿಶ್ವಾಸ ವ್ಯಕ್ತಪಡಿಸಿದ್ದರು.

ಮೋದಿ ಭೇಟಿಗೆ ಸಿದ್ಧತೆ ಏನು?

ಗುರುವಾರ ವಿವೇಕಾನಂದ ಕಲ್ಲಿನ ಸ್ಮಾರಕದಲ್ಲಿ ಪ್ರಧಾನಿಯವರ 45 ಗಂಟೆಗಳ ವಾಸ್ತವ್ಯ ಸುಗಮವಾಗಿರುವುದನ್ನು ಖಚಿತಪಡಿಸಿಕೊಳ್ಳಲು ಸುಮಾರು 2,000 ಪೊಲೀಸರು ಮತ್ತು ಭದ್ರತಾ ಏಜೆನ್ಸಿಗಳನ್ನು ನಿಯೋಜಿಸಲಾಗಿದೆ.

ಇದನ್ನೂ ಓದಿ: Modi Meditation: ಮೋದಿಗೆ ಧ್ಯಾನ ಮಾಡಲು ಬಿಡಬೇಡಿ; ಚುನಾವಣೆ ಆಯೋಗಕ್ಕೆ ಕಾಂಗ್ರೆಸ್ ಮೊರೆ!

ತಿರುನೆಲ್ವೇಲಿ ವ್ಯಾಪ್ತಿಯ ಡಿಐಜಿ ಪ್ರವೇಶ್ ಕುಮಾರ್ ಅವರು ಪೊಲೀಸ್ ವರಿಷ್ಠಾಧಿಕಾರಿ ಇ. ಸುಂದರವತನಂ ಅವರೊಂದಿಗೆ ಇಲ್ಲಿನ ಕಲ್ಲಿನ ಸ್ಮಾರಕ, ಬೋಟ್ ಜೆಟ್ಟಿ, ಹೆಲಿಪ್ಯಾಡ್ ಮತ್ತು ರಾಜ್ಯ ಅತಿಥಿ ಗೃಹದಲ್ಲಿ ಭದ್ರತಾ ವ್ಯವಸ್ಥೆಗಳನ್ನು ಪರಿಶೀಲಿಸಿದ್ದಾರೆ.

ಪಂಜಾಬ್‌ನ ಹೋಶಿಯಾರ್‌ಪುರದಲ್ಲಿ ಚುನಾವಣಾ ಪ್ರಚಾರವನ್ನು ಮುಗಿಸಿದ ಅನಂತರ ಪ್ರಧಾನಿ ಗುರುವಾರ ಮಧ್ಯಾಹ್ನ ತಿರುವನಂತಪುರಂ ವಿಮಾನ ನಿಲ್ದಾಣವನ್ನು ತಲುಪಲಿದ್ದಾರೆ. ಸಂಜೆ ಕನ್ಯಾಕುಮಾರಿಯಲ್ಲಿರುವ ರಾಜ್ಯ ಅತಿಥಿ ಗೃಹ ತಲುಪಿ ದೋಣಿ ಮೂಲಕ ವಿವೇಕಾನಂದ ಕಲ್ಲಿನ ಸ್ಮಾರಕಕ್ಕೆ ತೆರಳಲಿದ್ದಾರೆ. ಅವರು ಶನಿವಾರ ಮಧ್ಯಾಹ್ನದವರೆಗೆ ಅಲ್ಲಿಯೇ ಇರುತ್ತಾರೆ ಎನ್ನಲಾಗಿದೆ.

ಮೋದಿ ಶನಿವಾರ ಸಂಜೆ ವೇಳೆಗೆ ಕನ್ಯಾಕುಮಾರಿ ಹೆಲಿಪ್ಯಾಡ್ ತಲುಪಿ ತಿರುವನಂತಪುರಕ್ಕೆ ಹಿಂತಿರುಗಿ ಅದೇ ದಿನ ದೆಹಲಿಗೆ ತೆರಳಲಿದ್ದಾರೆ.

ತಮಿಳುನಾಡಿನ ಆಡಳಿತಾರೂಢ ಡಿಎಂಕೆ ಸರ್ಕಾರವು ಪ್ರಧಾನಿಯವರ ಈ ಭೇಟಿಗೆ ಅನುಮತಿಯನ್ನು ವಿರೋಧಿಸಿ ಪ್ರಸ್ತುತ ಜಾರಿಯಲ್ಲಿರುವ ಚುನಾವಣಾ ಮಾದರಿ ನೀತಿ ಸಂಹಿತೆ ಮತ್ತು ನಡೆಯುತ್ತಿರುವ ಪ್ರವಾಸೋದ್ಯಮ ಋತುವನ್ನು ಉಲ್ಲೇಖಿಸಿ ಜಿಲ್ಲಾಧಿಕಾರಿಗಳಿಗೆ ಮನವಿ ಸಲ್ಲಿಸಿದೆ.

Continue Reading

ದೇಶ

PM Narendra Modi: ಪ್ರಧಾನಿ ಮೋದಿ ಸ್ಪರ್ಧೆ ಅನರ್ಹತೆಗೆ ಕೋರಿ ಸಲ್ಲಿಸಿದ್ದ ಅರ್ಜಿ ತಿರಸ್ಕೃತ

PM Narendra Modi:ಪ್ರಧಾನಿ ಮೋದಿ ಭಯೋತ್ಪಾದನಾ ಚಟುವಟಿಕೆಯಲ್ಲಿ ತೊಡಗಿದ್ದಾರೆ ಮತ್ತು ತಮ್ಮ ಹತ್ಯೆಗೆ ಸಂಚು ರೂಪಿಸಿದ್ದಾರೆ ಎಂದು ಅರ್ಜಿದಾರ ದೀಪಕ್‌ ಕುಮಾರ್‌ ಆರೋಪಿಸಿದ್ದು, ಮೋದಿ ವಿಮಾನ ಅಪಘಾತ ಮಾಡಿಸಿ ನನ್ನ ಕೊಲೆಗೆ ಯತ್ನಿಸಿದ್ದಾರೆ ಎಂದು ದೂರಿದ್ದಾರೆ. 08.07.2018ರಂದು ಏರ್‌ಇಂಡಿಯಾ ವಿಮಾನ ಅಪಘಾತ ಮಾಡಿಸುವ ಮೂಲಕ ದೇಶದಲ್ಲಿ ಶಾಂತಿ ಸುವ್ಯವಸ್ಥೆ ಕದಡುವ ಪ್ರಯತ್ನ ನಡೆಸಿದ್ದರು ಎಂದು ಅರ್ಜಿಯಲ್ಲಿ ದೀಪಕ್‌ ದೂರಿದ್ದಾರೆ.

VISTARANEWS.COM


on

PM Narendra Modi
Koo

ನವದೆಹಲಿ: ವಾರಣಾಸಿ ಲೋಕಸಭಾ ಕ್ಷೇತ್ರದಿಂದ ಪ್ರಧಾನಿ ನರೇಂದ್ರ ಮೋದಿ(PM Narendra Modi) ಸ್ಪರ್ಧೆಯನ್ನು ಅನರ್ಹ(Disqualification)ಗೊಳಿಸುವಂತೆ ಕೋರಿ ಸಲ್ಲಿಸಲಾಗಿದ್ದ ಅರ್ಜಿಯನ್ನು ದಿಲ್ಲಿ ಹೈಕೋರ್ಟ್‌(Delhi high Court) ವಜಾಗೊಳಿಸಿದೆ. ಪ್ರಧಾನಿ ಮೋದಿ ವಿರುದ್ಧ ವಿಮಾನ ಪೈಲಟ್‌(Pilot) ಕ್ಯಾ. ದೀಪಕ್‌ ಕುಮಾರ್‌ ಸಲ್ಲಿಸಿದ್ದ ಅರ್ಜಿಯನ್ನು ಇಂದು ಕೋರ್ಟ್‌ ತಿರಸ್ಕರಿಸಿದೆ. ಪ್ರಧಾನಮಂತ್ರಿ ಅವರು ಭಾರತದ ಸಂವಿಧಾನಕ್ಕೆ ನಿಜವಾದ ನಂಬಿಕೆ ಮತ್ತು ನಿಷ್ಠೆಯನ್ನು ಹೊಂದಿರುವುದಾಗಿ ಸುಳ್ಳು ಪ್ರಮಾಣ ಮಾಡಿದ್ದಾರೆ ಎಂದು ಆರೋಪಿಸಿ ದೀಪಕ್‌ ಕುಮಾರ್‌ ಅರ್ಜಿ ಸಲ್ಲಿಸಿದ್ದರು.

ಪ್ರಧಾನಿ ಮೋದಿ ಭಯೋತ್ಪಾದನಾ ಚಟುವಟಿಕೆಯಲ್ಲಿ ತೊಡಗಿದ್ದಾರೆ ಮತ್ತು ತಮ್ಮ ಹತ್ಯೆಗೆ ಸಂಚು ರೂಪಿಸಿದ್ದಾರೆ ಎಂದು ಅರ್ಜಿದಾರ ದೀಪಕ್‌ ಕುಮಾರ್‌ ಆರೋಪಿಸಿದ್ದು, ಮೋದಿ ವಿಮಾನ ಅಪಘಾತ ಮಾಡಿಸಿ ನನ್ನ ಕೊಲೆಗೆ ಯತ್ನಿಸಿದ್ದಾರೆ ಎಂದು ದೂರಿದ್ದಾರೆ. 08.07.2018ರಂದು ಏರ್‌ಇಂಡಿಯಾ ವಿಮಾನ ಅಪಘಾತ ಮಾಡಿಸುವ ಮೂಲಕ ದೇಶದಲ್ಲಿ ಶಾಂತಿ ಸುವ್ಯವಸ್ಥೆ ಕದಡುವ ಪ್ರಯತ್ನ ನಡೆಸಿದ್ದರು ಎಂದು ಅರ್ಜಿಯಲ್ಲಿ ದೀಪಕ್‌ ದೂರಿದ್ದಾರೆ.

ಅರ್ಜಿ ವಿಚಾರಣೆ ನಡೆಸಿದ ಕೋರ್ಟ್‌ ಅರ್ಜಿದಾರರು ಪ್ರಧಾನಿ ನರೇಂದ್ರ ಮೋದಿ ನಿರಾಧಾರ ಆರೋಪ ಮಾಡಿದ್ದಾರೆ. ಪ್ರಧಾನಿ ವಿರುದ್ಧದ ಆರೋಪ ನಿರಾಧಾರ. ಸುಖಾ ಸುಮ್ಮನೆ ಪ್ರಧಾನಿ ವಿರುದ್ಧ ಹಗರಣದ ಆರೋಪ ಹೊರಿಸುತ್ತಿದ್ದಾರೆ ಎಂದು ಹೇಳಿರುವ ಕೋರ್ಟ್‌ ದೀಪಕ್‌ ಕುಮಾರ್‌ ಅವರ ಅರ್ಜಿಯನ್ನು ತಿರಸ್ಕರಿಸಿದೆ. ಪ್ರಧಾನಿ ಮೋದಿ ಮಾತ್ರವಲ್ಲದೇ ಪ್ರಕರಣಕ್ಕೆ ಸಂಬಂಧಿಸಿದಂತೆ ಗೃಹಸಚಿವ ಅಮಿತ್‌ ಶಾ, ನಾಗರಿಕ ವಿಮಾನಯಾನ ಸಚಿವ ಜ್ಯೋತಿರಾದಿತ್ಯಾ ಸಿಂದಿಯಾ ಅವರ ಸ್ಪರ್ಧೆಯನ್ನೂ ಅನರ್ಹಗೊಳಿಸುವಂತೆ ದೀಪಕ್‌ ಕುಮಾರ್‌ ತಮ್ಮ ಅರ್ಜಿಯಲ್ಲಿ ಮನವಿ ಮಾಡಿದ್ದರು.

ಪ್ರಧಾನಿ ನರೇಂದ್ರ ಮೋದಿ ಚುನಾವಣಾ ಪ್ರಚಾರ ಕಾರ್ಯಕ್ರಮದಲ್ಲಿ ನೀತಿ ಸಂಹಿತೆ ಉಲ್ಲಂಘನೆ(Code of conduct) ಮಾಡಿದ್ದಾರೆ ಅವರನ್ನು ಚುನಾವಣೆಯಿಂದ 6 ವರ್ಷ ಅನರ್ಹಗೊಳಿಸಬೇಕಂದು ಮನವಿ ಮಾಡಿ ಸಲ್ಲಿಸಲಾಗಿದ್ದ ಅರ್ಜಿಯನ್ನು ದಿಲ್ಲಿ ಕೋರ್ಟ್‌ ಈ ಹಿಂದೆ ವಜಾಗೊಳಿಸಿತ್ತು. ಆನಂದ್‌ ಎಸ್‌. ಜೋಂದಲ್‌ ಎಂಬುವರು ಸಲ್ಲಿಸಿದ್ದ ಅರ್ಜಿ ವಿಚಾರಣೆ ನಡೆಸಿದ ದಿಲ್ಲಿ ಕೋರ್ಟ್‌ ಅದನ್ನು ವಜಾಗೊಳಿಸಿತ್ತು. ಉತ್ತರಪ್ರದೇಶದ ಪಿಲಿಬಿತ್‌ನಲ್ಲಿ ಏ.6ರಂದು ನಡೆದ ಚುನಾವಣಾ ರ್ಯಾಲಿಯಲ್ಲಿ ಪ್ರಧಾನಿ ಮೋದಿ ಸಿಖ್‌ ಮತ್ತು ಹಿಂದೂ ಭಕ್ತರ ಭಕ್ತ ಬಗ್ಗೆ ಉಲ್ಲೇಖಸಿದ್ದರು ಆ ಮೂಲಕ ಚುನಾವಣಾ ನೀತಿ ಸಂಹಿತೆ ಉಲ್ಲಂಘಿಸಿದ್ದರು ಎಂದು ಅರ್ಜಿಯಲ್ಲಿ ತಿಳಿಸಿದ್ದರು.

ಇದನ್ನೂ ಓದಿ: Firecracker Explosion: ಪುರಿ ಜಗನ್ನಾಥ ದೇಗುಲದಲ್ಲಿ ಅಗ್ನಿ ದುರಂತ; 15 ಮಂದಿಗೆ ಗಾಯ

ಅಯೋಧ್ಯೆಯಲ್ಲಿ ರಾಮ ಮಂದಿರ ನಿರ್ಮಿಸುವುದನ್ನು ಇಂಡಿಯಾ ಒಕ್ಕೂಟ ಸದಾ ದ್ವೇಷಿಸಿತ್ತು. ಪ್ರಾಣ ಪ್ರತಿಷ್ಠಾ ಕಾರ್ಯಕ್ರಮದ ಆಹ್ವಾನ ಪತ್ರಿಕೆಯನ್ನು ನೀಡಿದ್ದರೂ ಅದನ್ನು ತಿರಸ್ಕರಿಸಿ ರಾಮಲಲ್ಲಾಗೆ ಅವಮಾನ ಮಾಡಿದ್ದರು. ಅವರ ಪಕ್ಷಗಳಿಂದ ಪ್ರಾಣ ಪ್ರತಿಷ್ಠಾ ಕಾರ್ಯಕ್ರಮಕ್ಕೆ ಆಗಮಿಸಿದ್ದ ನಾಯಕರನ್ನು ಆರು ವರ್ಷಗಳ ಕಾಲ ಉಚ್ಚಾಟನೆ ಮಾಡಲಾಗಿತ್ತು. ʼಶಕ್ತಿʼಯನ್ನು ನಿರ್ಣಾಮ ಮಾಡಬೇಕೆಂದು ಇಂಡಿಯಾ ಪಣತೊಟ್ಟಿದೆ. ಇಡೀ ದೇಶವೇ ಪೂಜಿಸುವ ಶಕ್ತಿಯನ್ನು ಕಾಂಗ್ರೆಸ್‌ ಅವಮಾನಿಸಿದೆ. ಶಕ್ತಿಯನ್ನು ಪೂಜಿಸುವ ದೇಶದ ಜನ ಕಾಂಗ್ರೆಸ್‌ ಅನ್ನು ಎಂದೂ ಕ್ಷಮಿಸಲ್ಲ ಎಂದು ಪಿಲಿಬಿತ್‌ ಅಭ್ಯರ್ಥಿ ಜಿತಿನ್‌ ಪ್ರಸಾದ್‌ ಪರ ಪ್ರಚಾರದ ವೇಳೆ ಪ್ರಧಾನಿ ವಾಗ್ದಾಳಿ ನಡೆಸಿದ್ದರು.

Continue Reading

Lok Sabha Election 2024

Narendra Modi: ಲೋಕಸಭಾ ಚುನಾವಣೆ ಫಲಿತಾಂಶದ 6 ತಿಂಗಳ ಬಳಿಕ ‘ರಾಜಕೀಯ ಭೂಕಂಪ’; ಮೋದಿನ ಮಾತಿನ ಮರ್ಮವೇನು?

VISTARANEWS.COM


on

Narendra Modi
Koo

ಕೋಲ್ಕತ್ತಾ: ಲೋಕಸಭಾ ಚುನಾವಣೆ (Lok Sabha Election)ಯ ಕೊನೆಯ ಹಂತದ ಮತದಾನಕ್ಕೆ ದಿನಗಣನೆ ಆರಂಭವಾಗಿದೆ. ಜೂನ್‌ 4ರಂದು ಫಲಿತಾಂಶ ಹೊರ ಬೀಳಲಿದ್ದು, ಈಗಾಗಲೇ ಈ ಕುರಿತಾದ ಲೆಕ್ಕಾಚಾರ ಆರಂಭವಾಗಿದೆ. ಈ ಮಧ್ಯೆ ಪಶ್ಚಿಮ ಬಂಗಾಳದ ಕಾಕ್ದ್ವೀಪ್‌ನಲ್ಲಿ ಮಾತನಾಡಿದ ಪ್ರಧಾನ ಮಂತ್ರಿ ನರೇಂದ್ರ ಮೋದಿ (Narendra Modi) ಅವರು, ಚುನಾವಣಾ ಫಲಿತಾಂಶ ಘೋಷಣೆಯಾದ ಆರು ತಿಂಗಳ ಬಳಿಕ ಬಹುದೊಡ್ಡ ಬದಲಾವಣೆಯಾಗಲಿದ್ದು, ‘ರಾಜಕೀಯ ಭೂಕಂಪ’ ಸಂಭವಿಸಲಿದೆ ಎಂದು ಭವಿಷ್ಯ ನುಡಿದಿದ್ದಾರೆ.

ಪಶ್ಚಿಮ ಬಂಗಾಳದ ಗಡಿ ಪ್ರದೇಶಗಳಲ್ಲಿನ ಜನಸಂಖ್ಯಾಶಾಸ್ತ್ರವು ಒಳನುಸುಳುವಿಕೆಯಿಂದಾಗಿ ಬದಲಾಗುತ್ತಿದೆ ಎಂದು ಆರೋಪಿಸಿರುವ ಪ್ರಧಾನಿ, ತೃಣಮೂಲ ಕಾಂಗ್ರೆಸ್ (TMC) ಅಕ್ರಮ ವಲಸಿಗರು ಬಂಗಾಳದಲ್ಲಿ ನೆಲೆಸಲು ತುಷ್ಟೀಕರಣದ ರಾಜಕೀಯದಲ್ಲಿ ತೊಡಗಿದೆ ಎಂದು ವಾಗ್ದಾಳಿ ನಡೆಸಿದ್ದಾರೆ.

ಪ್ರಧಾನಿ ಹೇಳಿದ್ದೇನು?

ರಾಜ್ಯದ ತೃಣಮೂಲ ಕಾಂಗ್ರೆಸ್ ಸರ್ಕಾರವು ಮುಸ್ಲಿಮರಿಗೆ ಸುಳ್ಳು ಜಾತಿ ಪ್ರಮಾಣ ಪತ್ರಗಳನ್ನು ವಿತರಿಸುತ್ತಿದೆ. ಈ ಮೂಲಕ ಮುಸ್ಲಿಮರಿಗೆ ʼಮೂಲʼ ಒಬಿಸಿಗಳ ಹಕ್ಕುಗಳನ್ನು ನೀಡುತ್ತಿದೆ ಎಂದು ಹೇಳಿದ್ದಾರೆ. “ಬಂಗಾಳದ ಗಡಿ ಪ್ರದೇಶಗಳಲ್ಲಿನ ಜನಸಂಖ್ಯಾಶಾಸ್ತ್ರವನ್ನು ಒಳ ನುಸುಳುವಿಕೆಗೆ ಅವಕಾಶ ನೀಡುವ ಮೂಲಕ ಬದಲಾಯಿಸಲಾಗುತ್ತಿದೆ. ಧಾರ್ಮಿಕವಾಗಿ ಕಿರುಕುಳಕ್ಕೊಳಗಾದ ಅಲ್ಪಸಂಖ್ಯಾತರಿಗೆ ಪೌರತ್ವ ನೀಡುವುದನ್ನು ಟಿಎಂಸಿ ವಿರೋಧಿಸುತ್ತದೆ. ಟಿಎಂಸಿ ನಾಯಕರು ಸಿಎಎಯನ್ನು ಏಕೆ ವಿರೋಧಿಸುತ್ತಿದ್ದಾರೆ? ಸಿಎಎ ಬಗ್ಗೆ ಏಕೆ ಸುಳ್ಳು ಹೇಳುತ್ತಿದ್ದಾರೆ?ʼʼ ಎಂದು ಮೋದಿ ಪ್ರಶ್ನಿಸಿದ್ದಾರೆ.

ಮಾಟುವಾ ಸಮುದಾಯದ ಸದಸ್ಯರು ತಮಗೆ ಸಲ್ಲಬೇಕಾದ ಎಲ್ಲ ಗೌರವದೊಂದಿಗೆ ಭಾರತೀಯ ಪೌರತ್ವವನ್ನು ಪಡೆಯುತ್ತಾರೆ ಎಂದು ಮೋದಿ ಘೋಷಿಸಿದ್ದಾರೆ. ಹಿಂದುಗಳು ಮತ್ತು ಮಾಟುವಾಗಳು ಬಂಗಾಳದಲ್ಲಿ ನೆಲೆಸುವುದನ್ನು ಟಿಎಂಸಿ ವಿರೋಧೊಸುತ್ತದೆ ಎಂದು ಅವರು ಹೇಳಿದ್ದಾರೆ. ʼʼಪಶ್ಚಿಮ ಬಂಗಾಳದಲ್ಲಿ ಮೀಸಲಾತಿಯನ್ನು ದುರುಪಯೋಗಪಡಿಲಾಗುತ್ತಿದೆ. ಮುಸ್ಲಿಮರಿಗೆ ಅನುಕೂಲ ಮಾಡಿಕೊಟ್ಟು ಹಿಂದುಳಿದ ವರ್ಗ ಮತ್ತು ದಲಿತರಿಗೆ ಅನ್ಯಾಯ ಎಸಗಲಾಗುತ್ತಿದೆ. ಆ ಮೂಲಕ ಟಿಎಂಸಿ ಸಂವಿಧಾನ ವಿರೋಧಿ ಚಟುವಟಿಕೆಯಲ್ಲಿ ತೊಡಗಿಸಿಕೊಂಡಿದೆʼʼ ಎಂದು ದೂರಿದ್ದಾರೆ.

ʼʼಅಕ್ರಮ ಒಳನುಸುಳುವಿಕೆ ಕಾರಣದಿಂದ ರಾಜ್ಯದ ಸಾಕಷ್ಟು ಯುವ ಜನತೆ ಅವಕಾಶ ವಂಚಿತವಾಗುತ್ತಿದೆ. ಅಕ್ರಮ ವಲಸಿಗರು ಮುಂದೆ ನಿಮ್ಮ ಆಸ್ತಿ, ಜಾಗದ ಮೇಲೆ ಅತಿಕ್ರಮಣವನ್ನೂ ಮಾಡಬಹುದು. ಹೀಗಾಗಿ ಇಡೀ ದೇಶವೇ ಈ ಬಗ್ಗೆ ಆತಂಕಗೊಂಡಿದೆʼʼ ಎಂದು ಮೋದಿ ಎಚ್ಚರಿಸಿದ್ದಾರೆ.

ಇದನ್ನೂ ಓದಿ: CAA Certificate: ದೀದಿ ವಿರೋಧದ ಮಧ್ಯೆಯೂ ಬಂಗಾಳದಲ್ಲಿ ಸಿಎಎ ಜಾರಿಗೆ ತಂದ ಕೇಂದ್ರ; ಪೌರತ್ವ ಪ್ರದಾನ!

ʼʼನಿಮ್ಮ ವೋಟು ದೇಶದ ರಾಜಕೀಯ ದಿಕ್ಕನ್ನೇ ಬದಲಾಯಿಸಬಹುದು. ಜೂನ್‌ 4ರ ನಂತರ 6 ತಿಂಗಳೊಳಗೆ ರಾಜಕೀಯವಾಗಿ ಬಹಳಷ್ಟು ಬದಲಾವಣೆ ಕಂಡು ಬರಲಿದೆ. ವಂಶಪಾರಂಪರ್ಯ ರಾಜಕಾರಣದಲ್ಲಿ ಬೆಳೆಯುವ ರಾಜಕೀಯ ಪಕ್ಷಗಳು ತಾವಾಗಿಯೇ ಛಿದ್ರವಾಗುತ್ತವೆ. ಆ ಪಕ್ಷಗಳ ಕಾರ್ಯಕರ್ತರು ಸಹ ದಣಿದಿದ್ದಾರೆ. ಅವರೆಲ್ಲರೂ ದೇಶವು ಯಾವ ದಿಕ್ಕಿನಲ್ಲಿ ಸಾಗುತ್ತಿದೆ ಮತ್ತು ಅವರ ಪಕ್ಷಗಳು ಯಾವ ದಿಕ್ಕಿನಲ್ಲಿ ಸಾಗುತ್ತಿವೆ ಎಂಬುದನ್ನು ಗಮನಿಸುತ್ತಿದ್ದಾರೆ” ಎಂದು ಪ್ರಧಾನಿ ವಿವರಿಸಿದ್ದಾರೆ. ಮೀನುಗಾರರಿಗಾಗಿ ಕೇಂದ್ರ ಸರ್ಕಾರ ಜಾರಿಗೆ ತಂದ ವಿವಿಧ ಯೋಜನೆಗಳು, ಉಜ್ವಲ ಮತ್ತು ಆಯುಷ್ಮಾನ್ ಭಾರತ್‌ ಮುಂತಾದ ಯೋಜನೆಗಳನ್ನು ಟಿಎಂಸಿ ರಾಜ್ಯದಲ್ಲಿ ಸಮರ್ಪಕವಾಗಿ ಅನುಷ್ಠಾನಗೊಳಿಸುತ್ತಿಲ್ಲ ಎಂದೂ ಮೋದಿ ಆರೋಪಿಸಿದ್ದಾರೆ.

Continue Reading

ದೇಶ

PM Narendra Modi: ಮೋದಿ ಧ್ಯಾನ ಮಾಡುವುದು ನೀತಿ ಸಂಹಿತೆ ಉಲ್ಲಂಘನೆಯೆ? ಕಾನೂನು ತಜ್ಞರ ಅಭಿಪ್ರಾಯ ಹೀಗಿದೆ

PM Narendra Modi: ಕಾನೂನು ತಜ್ಞರ ಪ್ರಕಾರ, ಧ್ಯಾನದ ನೇರ ಪ್ರಸಾರವು ನೀತಿ ಸಂಹಿತೆಯ ನಿಯಮವನ್ನು ಉಲ್ಲಂಘನೆ ಮಾಡುವುದಿಲ್ಲ. ಏಕೆಂದರೆ ಧ್ಯಾನದ ಸಂದರ್ಭದಲ್ಲಿ ಪ್ರಧಾನಿ ಮೋದಿ ಅವರು ಚುನಾವಣಾ ಪ್ರಚಾರಕ್ಕೆ ಸಂಬಂಧಿಸಬಹುದಾದ ಯಾವುದೇ ಹೇಳಿಕೆಗಳನ್ನು ಕೊಡುವುದಿಲ್ಲ. 2019 ರ ಚುನಾವಣಾ ಪ್ರಚಾರದ ನಂತರ ಪ್ರಧಾನ ಮಂತ್ರಿ ಕೇದಾರನಾಥ ಗುಹೆಯಲ್ಲಿ ಇದೇ ರೀತಿಯ ಧ್ಯಾನ ಮಾಡಿದ್ದರು. ಆಗಲೂ ಯಾವುದೇ ನಿಯಮ ಉಲ್ಲಂಘನೆ ಆಗಿಲ್ಲ. ಎಂದು ಕಾನೂನು ತಜ್ಞರು ಹೇಳಿದ್ದಾರೆ.

VISTARANEWS.COM


on

PM Narendra Modi
Koo

ನವದೆಹಲಿ: ಲೋಕಸಭಾ ಚುನಾವಣೆ(Lok Sabha Election 2024) ಕೊನೆಯ ಹಂತಕ್ಕೆ ಬಂದು ತಲುಪಿದೆ. ಇಂದು ಏಳನೇ ಹಂತದ ಚುನಾವಣೆಯ ಬಹಿರಂಗ ಪ್ರಚಾರಕ್ಕೆ ತೆರೆ ಬೀಳಲಿದೆ. ಚುನಾವಣಾ ಪ್ರಚಾರ ಅಂತ್ಯಗೊಳ್ಳುತ್ತಿದ್ದಂತೆ ಪ್ರಧಾನಿ ನರೇಂದ್ರ ಮೋದಿ(PM Narendra Modi) ಮೂರು ದಿನಗಳ ಕಾಲ ಕನ್ಯಾಕುಮಾರಿ(Kanyakumari) ಪ್ರವಾಸ ಕೈಗೊಳ್ಳಲಿದ್ದು, ಅಲ್ಲಿ ಸ್ವಾಮಿ ವಿವೇಕಾನಂದ(Swamy Vivekananda)ರ ಗೌರವಾರ್ಥ ನಿರ್ಮಿಸಿರುವ ಕಲ್ಲಿನ ಸ್ಮಾರಕದಲ್ಲಿ ಧ್ಯಾನ ಮಾಡಲಿದ್ದಾರೆ. ಇನ್ನು ಪ್ರಧಾನಿ ಮೋದಿಯವರ ಈ ಧ್ಯಾನದ ವಿಚಾರಕ್ಕೆ ಪ್ರತಿಪಕ್ಷಗಳು ಆಕ್ರೋಶ ವ್ಯಕ್ತಪಡಿಸಿದ್ದ, ಇದು ಚುನಾವಣಾ ನೀತಿ ಸಂಹಿತೆ ಉಲ್ಲಂಘನೆ ಮಾಡುತ್ತಿದ್ದಾರೆ ಎಂದು ಅರೋಪಿಸಿದ್ದಾರೆ. ಆದರೆ ಪ್ರಧಾನಿ ಕನ್ಯಾಕುಮಾರಿಯಲ್ಲಿ ಧ್ಯಾನ ಮಾಡುತ್ತಾರೆಯೇ ಹೊರತು ಚುನಾವಣೆ ಬಗ್ಗೆ ಮಾತನಾಡುವುದಿಲ್.‌ ಹಾಗಿರುವ ನೀತಿ ಸಂಹಿತೆ ಉಲ್ಲಂಘನೆ ಹೇಗೆ ತಾನೇ ಆಗಲು ಸಾಧ್ಯ ಎಂದು ಕಾನೂನು ಸಲಹೆಗಾರರು ಪ್ರಶ್ನಿಸಿದ್ದಾರೆ.

ಕಾಂಗ್ರೆಸ್‌ ಆರೋಪ ಏನು?

ಸಾರ್ವಜನಿಕ ಪ್ರಾತಿನಿಧ್ಯ ಕಾಯಿದೆ 1951ರ ಸೆಕ್ಷನ್ 126 ಪ್ರಕಾರ, ಮತದಾನಕ್ಕೆ 48 ಗಂಟೆಗಳ ಮೊದಲು ಚುನಾವಣಾ ಪ್ರಚಾರ ಮಾಡುವಂತಿಲ್ಲ. ಮತದಾನಕ್ಕೆ 48 ಗಂಟೆಗಳ ಮೊದಲು ಮೌನ ಅವಧಿ ಪ್ರಾರಂಭವಾಗುತ್ತದೆ. ವಾಸ್ತವವಾಗಿ, ಪ್ರಧಾನಿ ಮೋದಿ ಅವರ ಧ್ಯಾನ ಯಾತ್ರೆಯು ನೀತಿ ಸಂಹಿತೆಯನ್ನು ಉಲ್ಲಂಘಿಸುತ್ತದೆ ಎಂದು ಕಾಂಗ್ರೆಸ್ ಆರೋಪಿಸಿದೆ. ಪ್ರಧಾನಿಯವರ ಧ್ಯಾನ ಯಾತ್ರೆಯನ್ನು ಮಾಧ್ಯಮಗಳಲ್ಲಿ ಪ್ರಸಾರ ಮಾಡದಂತೆ ನೋಡಿಕೊಳ್ಳಬೇಕು ಎಂದು ಪಕ್ಷದ ಮುಖಂಡರು ಚುನಾವಣಾ ಆಯೋಗಕ್ಕೆ ಮನವಿ ಮಾಡಿದ್ದಾರೆ.

ಕಾನೂನು ಸಲಹೆಗಾರರು ಹೇಳೋದೇನು?

ಕಾನೂನು ತಜ್ಞರ ಪ್ರಕಾರ, ಧ್ಯಾನದ ನೇರ ಪ್ರಸಾರವು ನೀತಿ ಸಂಹಿತೆಯ ನಿಯಮವನ್ನು ಉಲ್ಲಂಘನೆ ಮಾಡುವುದಿಲ್ಲ. ಏಕೆಂದರೆ ಧ್ಯಾನದ ಸಂದರ್ಭದಲ್ಲಿ ಪ್ರಧಾನಿ ಮೋದಿ ಅವರು ಚುನಾವಣಾ ಪ್ರಚಾರಕ್ಕೆ ಸಂಬಂಧಿಸಬಹುದಾದ ಯಾವುದೇ ಹೇಳಿಕೆಗಳನ್ನು ಕೊಡುವುದಿಲ್ಲ. 2019 ರ ಚುನಾವಣಾ ಪ್ರಚಾರದ ನಂತರ ಪ್ರಧಾನ ಮಂತ್ರಿ ಕೇದಾರನಾಥ ಗುಹೆಯಲ್ಲಿ ಇದೇ ರೀತಿಯ ಧ್ಯಾನ ಮಾಡಿದ್ದರು. ಆಗಲೂ ಯಾವುದೇ ನಿಯಮ ಉಲ್ಲಂಘನೆ ಆಗಿಲ್ಲ. ಎಂದು ಕಾನೂನು ತಜ್ಞರು ಹೇಳಿದ್ದಾರೆ.

ಇದನ್ನೂ ಓದಿ: Firecracker Explosion: ಪುರಿ ಜಗನ್ನಾಥ ದೇಗುಲದಲ್ಲಿ ಅಗ್ನಿ ದುರಂತ; 15 ಮಂದಿಗೆ ಗಾಯ

ಜನರ ಪ್ರಾತಿನಿಧ್ಯ ಕಾಯಿದೆ, 1951 ರ ಸೆಕ್ಷನ್ 126, ನೀತಿ ಸಂಹಿತೆ ಜಾರಿಯಲ್ಲಿರುವ ಸಂದರ್ಭದಲ್ಲಿ ಸಾರ್ವಜನಿಕ ಸಭೆಗಳು ಅಥವಾ ಪ್ರಚಾರ ಮತ್ತು ಸಾರ್ವಜನಿಕರಿಗೆ ಚುನಾವಣಾ ವಿಷಯ ಪ್ರದರ್ಶಿಸುವುದನ್ನು ನಿಷೇಧಿಸುತ್ತದೆ ಎಂದು ಕಾನೂನು ತಜ್ಞರು ಹೇಳಿದ್ದಾರೆ. ಅದಾಗ್ಯೂ, ಬಹು-ಹಂತದ ಚುನಾವಣೆಗಳ ಸಂದರ್ಭದಲ್ಲಿ ಇದು ಅನ್ವಯಿಸುವುದಿಲ್ಲ. ಚುನಾವಣೆ ನಡೆಯುವ ಕ್ಷೇತ್ರದಲ್ಲಿ ಇಂತಹ ಕಾರ್ಯಕ್ರಮ ಕೈಗೊಂಡರೆ ಅದರಿಂದ ನೀತಿ ಸಂಹಿತೆ ಉಲ್ಲಂಘನೆ ಆಗುವುದಿಲ್ಲ ಎಂದು ತಜ್ಞರು ತಿಳಿಸಿದ್ದಾರೆ.

2000 ಪೊಲೀಸರನ್ನು ನಿಯೋಜನೆ

ಕನ್ಯಾಕುಮಾರಿಯಲ್ಲಿ ಪ್ರಧಾನಿ ನರೇಂದ್ರ ಮೋದಿ ಅವರು ಧ್ಯಾನ ಮಾಡಲಿದ್ದು ಇದಕ್ಕಾಗಿ ಭಾರೀ ಬಿಗಿ ಭದ್ರತೆ ಒದಗಿಸಲಾಗಿದೆ. ಸ್ಥಳದಲ್ಲಿ ಸುಮಾರು 2,000 ಪೊಲೀಸರ ಹೊರತಾಗಿ ವಿವಿಧ ಭದ್ರತಾ ಏಜೆನ್ಸಿಗಳು ಕಟ್ಟುನಿಟ್ಟಿನ ನಿಗಾ ವಹಿಸಲಿವೆ. ಅಷ್ಟೇ ಅಲ್ಲ, ಭಾರತೀಯ ಕೋಸ್ಟ್ ಗಾರ್ಡ್ ಮತ್ತು ಭಾರತೀಯ ನೌಕಾಪಡೆಯು ಕಡಲ ಗಡಿಗಳಲ್ಲಿ ಕಣ್ಗಾವಲು ನಡೆಸಲಿದೆ.

Continue Reading
Advertisement
Radhika Merchant
ಪ್ರಮುಖ ಸುದ್ದಿ6 mins ago

Radhika Merchant : ಅನಂತ್​​ ಅಂಬಾನಿ- ರಾಧಿಕಾ ಮರ್ಚೆಂಟ್​ ವಿವಾಹದ ಸ್ಥಳ ಬಹಿರಂಗ; ಇಲ್ಲಿದೆ ವಿವರ

Suspicious Death Advocate Chaitra Gowda Case
ಬೆಂಗಳೂರು25 mins ago

Suspicious Death: ಸಿಸಿಬಿ ತೆಕ್ಕೆಗೆ ವಕೀಲೆ ಚೈತ್ರಾ ಡೆತ್ ಕೇಸ್; 15 ದಿನಗಳ ಸಿಸಿಟಿವಿ ಪರಿಶೀಲನೆ

Star Fashion
ಫ್ಯಾಷನ್52 mins ago

Star Fashion: ಪಂಚೆ ಜೊತೆ ಟ್ರೋಫಿ ಜಾಕೆಟ್‌ ಧರಿಸಿದ ನಟಿ ತಮನ್ನಾಳ ಯೂನಿಕ್‌ ಫ್ಯಾಷನ್‌!

Health Insurance
ಮನಿ-ಗೈಡ್1 hour ago

Health Insurance: ಕ್ಯಾಶ್​ಲೆಸ್​ ಕ್ಲೈಮ್‌ ಗಳಿಗೆ ಆಸ್ಪತ್ರೆಯಲ್ಲಿ ಇನ್ನು ಹೆಚ್ಚು ಹೊತ್ತು ಕಾಯಬೇಕಿಲ್ಲ; ಇಲ್ಲಿದೆ ಹೊಸ ನಿಯಮ

First successful TAVR surgery in the state at Fortis Hospital
ಬೆಂಗಳೂರು1 hour ago

Fortis Hospital: ರಾಜ್ಯದಲ್ಲೇ ಮೊದಲ ಬಾರಿಗೆ ಅಪರೂಪದ ಶಸ್ತ್ರಚಿಕಿತ್ಸೆ

MLA Belur Gopalakrishna election campaign for Congress candidates at ripponpete
ರಾಜಕೀಯ1 hour ago

MLC Election: ವಿಧಾನಪರಿಷತ್ ಚುನಾವಣೆ; ಕಾಂಗ್ರೆಸ್ ಅಭ್ಯರ್ಥಿಗಳ ಪರ ಶಾಸಕ ಬೇಳೂರು ಗೋಪಾಲಕೃಷ್ಣ ಮತಯಾಚನೆ

Vijayanagara News Distribute good quality sowing seeds and fertilizers says Tehsildar Amaresh G K
ವಿಜಯನಗರ1 hour ago

Vijayanagara News: ಉತ್ತಮ ಗುಣಮಟ್ಟದ ಬಿತ್ತನೆ ಬೀಜ, ರಸಗೊಬ್ಬರ ವಿತರಿಸಿ: ತಹಸೀಲ್ದಾರ್‌ ಅಮರೇಶ್

Vishwadarshan Education Institute President Hariprakash konemane spoke in Training Workshop for Vishwadarshan Central School Teachers at Yallapura
ಉತ್ತರ ಕನ್ನಡ1 hour ago

Uttara Kannada News: ಸಂಸ್ಕಾರಯುತ, ಗುಣಾತ್ಮಕ ಶಿಕ್ಷಣ ನೀಡುವಲ್ಲಿ ವಿಶ್ವದರ್ಶನ ಶಿಕ್ಷಣ ಸಂಸ್ಥೆ ಮುಂಚೂಣಿ: ಹರಿಪ್ರಕಾಶ್‌ ಕೋಣೆಮನೆ

indo Chaina border
ದೇಶ1 hour ago

Indo China Border : ಸಿಕ್ಕಿಂನಿಂದ 150 ಕಿ.ಮೀ ದೂರದಲ್ಲಿ ಚೀನಾದಿಂದ ಅತ್ಯಾಧುನಿಕ ಯುದ್ಧ ವಿಮಾನ ನಿಯೋಜನೆ

Prevention Of Obesity
ಆರೋಗ್ಯ1 hour ago

Prevention Of Obesity: ಆರೋಗ್ಯಪೂರ್ಣ ಜೀರ್ಣಕ್ರಿಯೆ ಮೂಲಕ ಬೊಜ್ಜು ನಿವಾರಣೆ ಸಾಧ್ಯ

Sharmitha Gowda in bikini
ಕಿರುತೆರೆ8 months ago

Geetha Serial Kannada: ನಿದ್ದೆ ಕದ್ದ ಚೋರಿ! ನಟಿ `ಭಾನುಮತಿ’ ಹಾಟ್‌ ಪೋಟೊಗಳಿಗೆ ಫ್ಯಾನ್ಸ್ ಫುಲ್ ಫಿದಾ

Kannada Serials
ಕಿರುತೆರೆ8 months ago

Kannada Serials TRP: 2ನೇ ಸ್ಥಾನದಲ್ಲಿ 2 ಧಾರಾವಾಹಿಗಳು; ಟಿಆರ್‌ಪಿ ರೇಸ್‌ನಲ್ಲಿಲ್ಲ ಭಾಗ್ಯಲಕ್ಷ್ಮೀ!

Bigg Boss- Saregamapa 20 average TRP
ಕಿರುತೆರೆ7 months ago

Kannada Serials TRP: ಏಳನೇ ಸ್ಥಾನಕ್ಕೆ ʻಅಮೃತಧಾರೆʼ ಕುಸಿತ; ಬಿಗ್‌ ಬಾಸ್‌-ಸರಿಗಮಪ ಟಿಆರ್‌ಪಿ ಎಷ್ಟು?

galipata neetu
ಕಿರುತೆರೆ6 months ago

Kanyadana Serial: ಕಿರುತೆರೆಗೆ ಮತ್ತೆ ಎಂಟ್ರಿ ಕೊಟ್ಟ ʻಗಾಳಿಪಟʼ ಖ್ಯಾತಿಯ ʻನೀತುʼ!

Kannada Serials
ಕಿರುತೆರೆ8 months ago

Kannada Serials TRP: ನಾಲ್ಕನೇ ಸ್ಥಾನಕ್ಕೆ ಕುಸಿತ ಕಂಡ ʻಸೀತಾ ರಾಮʼ; ಟಿಆರ್‌ಪಿ ರೇಸ್‌ಗೆ ʻಭಾಗ್ಯಲಕ್ಷ್ಮಿʼ ಬ್ಯಾಕ್‌!

Kannada Serials
ಕಿರುತೆರೆ8 months ago

Kannada Serials TRP: ಟಿಆರ್‌ಪಿಯಲ್ಲಿ ʻಭಾಗ್ಯಲಕ್ಷ್ಮೀʼ ಹವಾ; ʻಪುಟ್ಟಕ್ಕನ ಮಕ್ಕಳುʼ ಧಾರಾವಾಹಿಗೆ ಸಂಕಷ್ಟ!

Bigg Boss' dominates TRP; Sita Rama fell to the sixth position
ಕಿರುತೆರೆ7 months ago

Kannada Serials TRP: ಟಿಆರ್‌ಪಿಯಲ್ಲಿ ʻಬಿಗ್ ಬಾಸ್ʼದೇ ಮೇಲುಗೈ; 6ನೇ ಸ್ಥಾನಕ್ಕೆ ಕುಸಿದ ʻಸೀತಾ ರಾಮʼ

geetha serial Dhanush gowda engagement
ಕಿರುತೆರೆ6 months ago

Dhanush Gowda: ಗೀತಾ ಧಾರಾವಾಹಿ ನಟನ ನಿಶ್ಚಿತಾರ್ಥ; ಭವ್ಯಾಳ ಕಮೆಂಟ್‌ ಬಾಕ್ಸ್‌ ಆಫ್‌!

varun
ಕಿರುತೆರೆ6 months ago

Brindavana Serial: ʼಬೃಂದಾವನʼ ಧಾರಾವಾಹಿಯಲ್ಲಿ ದೊಡ್ಡ ಟ್ವಿಸ್ಟ್‌; ಪ್ರಮುಖ ಪಾತ್ರಧಾರಿಯೇ ಬದಲು

Kannada Serials
ಕಿರುತೆರೆ9 months ago

Kannada Serials TRP: ಟಿಆರ್‌ಪಿಯಲ್ಲಿ ಏರಿಕೆ ಕಂಡ ʻಅಮೃತಧಾರೆʼ; ʻಗಟ್ಟಿಮೇಳʼಕ್ಕೆ ನಾಲ್ಕನೇ ಸ್ಥಾನ!

Assault Case in Shivamogga
ಕ್ರೈಂ6 hours ago

Assault Case : ಶಿವಮೊಗ್ಗದಲ್ಲಿ ಮತ್ತೆ ಬಾಲ ಬಿಚ್ಚಿದ ಪುಂಡರು; ಗಾಂಜಾ ನಶೆಯಲ್ಲಿ ವಾಹನಗಳು ಪೀಸ್‌ ಪೀಸ್‌

Karnataka weather Forecast
ಮಳೆ2 days ago

Karnataka Weather : ಚಿಕ್ಕಮಗಳೂರಲ್ಲಿ ಭಾರಿ ಮಳೆ; ಯಾದಗಿರಿಯಲ್ಲಿ ಕರೆಂಟ್‌ ಕಟ್‌, ಜನರೇಟರ್‌ನಿಂದ ಮೊಬೈಲ್‌ಗಳಿಗೆ ಚಾರ್ಜಿಂಗ್‌!

tumkur murder
ತುಮಕೂರು2 days ago

Tumkur Murder : ಮಗುವಿನ ಮುಂದೆಯೇ ಹೆಂಡತಿಯ ಕತ್ತು, ದೇಹವನ್ನು ಕತ್ತರಿಸಿ ಬಿಸಾಡಿದ ದುಷ್ಟ

Karnataka Weather Forecast
ಮಳೆ3 days ago

Karnataka Weather : ಕಡಲತೀರದಲ್ಲಿ ಅಲೆಗಳ ಅಬ್ಬರ, ಪ್ರವಾಸಿಗರಿಗೆ ಕಟ್ಟೆಚ್ಚರ; ನಾಳೆಯೂ ಗಾಳಿ ಸಹಿತ ಮಳೆ ಅಬ್ಬರ

Karnataka Rain
ಮಳೆ4 days ago

Karnataka Rain : ಯಾದಗಿರಿಯಲ್ಲಿ ಬಿರುಗಾಳಿ ಸಹಿತ ಮಳೆ; ಸಿಡಿಲು ಬಡಿದು ಎಮ್ಮೆಗಳು ಸಾವು

Basavanagudi News
ಬೆಂಗಳೂರು4 days ago

Basavanagudi News : ಪೂಜಾ ಸಾಮಗ್ರಿಗೆ ಒನ್‌ ಟು ಡಬಲ್‌ ರೇಟ್‌; ದೊಡ್ಡ ಗಣಪತಿ ದೇಗುಲದಲ್ಲಿ ಕೈ ಕೈ ಮಿಲಾಯಿಸಿದ ಭಕ್ತರು-ವ್ಯಾಪಾರಿಗಳು

Karnataka Rain
ಮಳೆ5 days ago

Karnataka Rain : ಭಾರಿ ಮಳೆಗೆ ರಸ್ತೆ ಕಾಣದೆ ರಾಜಕಾಲುವೆಗೆ ಉರುಳಿದ ಆಟೋ; ಚಾಲಕ ಸ್ಥಳದಲ್ಲೇ ಸಾವು

dina bhavishya read your daily horoscope predictions for May 23 2024
ಭವಿಷ್ಯ1 week ago

Dina Bhavishya : 12 ರಾಶಿಯವರ ಇಂದಿನ ಭವಿಷ್ಯ ಹೇಗಿದೆ? ಯಾರಿಗೆ ಶುಭ, ಯಾರಿಗೆ ಅಶುಭ ಫಲ?

Karnataka Weather Forecast
ಮಳೆ1 week ago

Karnataka Weather : ಮುಂದುವರಿಯಲಿದೆ ವರುಣಾರ್ಭಟ; ಬೆಂಗಳೂರಲ್ಲೂ ಭಾರಿ ಮಳೆ ನಿರೀಕ್ಷೆ!

Karnataka Rain
ಮಳೆ1 week ago

Karnataka Rain : ಭಾರಿ ಮಳೆಗೆ ಕರೆಂಟ್‌ ಕಟ್‌, ಕತ್ತಲಲ್ಲೇ ರೋಗಿಗಳಿಗೆ ಟ್ರೀಟ್‌ಮೆಂಟ್‌; ಮರ ಬಿದ್ದರೂ ಪಾರಾದ ತಾಯಿ-ಮಗ

ಟ್ರೆಂಡಿಂಗ್‌