‌Lok Sabha Election 2024: ಡಿ.ಕೆ.ಸುರೇಶ್‌ದು ಸ್ವಾರ್ಥ, ಸುಲಿಗೆ, ಕೆಡುಕು ರಾಜಕಾರಣ ಎಂದ ಜೆಡಿಎಸ್! - Vistara News

Lok Sabha Election 2024

‌Lok Sabha Election 2024: ಡಿ.ಕೆ.ಸುರೇಶ್‌ದು ಸ್ವಾರ್ಥ, ಸುಲಿಗೆ, ಕೆಡುಕು ರಾಜಕಾರಣ ಎಂದ ಜೆಡಿಎಸ್!

‌Lok Sabha Election 2024: ಬೆಂಗಳೂರು ಗ್ರಾಮಾಂತರ ಲೋಕಸಭಾ ಕ್ಷೇತ್ರದ ಬಿಜೆಪಿ ಅಭ್ಯರ್ಥಿ ಡಾ. ಸಿ.ಎನ್.‌ ಮಂಜುನಾಥ್‌ ಹಾಗೂ ಮಾಜಿ ಪ್ರಧಾನಿ ಎಚ್.ಡಿ. ದೇವೇಗೌಡರ ಕುಟುಂಬದ ಬಗ್ಗೆ ಮಾತನಾಡಿದ್ದ ಸಂಸದ ಡಿ.ಕೆ. ಸುರೇಶ್‌ಗೆ ಜೆಡಿಎಸ್‌ ತಿರುಗೇಟು ನೀಡಿದೆ. ನಿಮ್ಮ ಕುಟುಂಬದ್ದು ಫ್ಯಾಮಿಲಿ ಪಾಲಿಟಿಕ್ಸೋ ಅಥವಾ ಫ್ಯಾಮಿಲಿ ಪ್ಯಾಕೇಜೋ? ಎಂದು ಕಾಲೆಳೆದಿದೆ.

VISTARANEWS.COM


on

Lok Sabha Election 2024 DK Suresh is selfish extortionist asays JDS
ಮಹತ್ವದ, ಕುತೂಹಲಕರ ಸುದ್ದಿಗಾಗಿ ಫಾಲೊ ಮಾಡಿ
Koo

ಬೆಂಗಳೂರು: ಲೋಕಸಭಾ ಚುನಾವಣೆಯಲ್ಲಿ ಬೆಂಗಳೂರು ಗ್ರಾಮಾಂತರ ಲೋಕಸಭಾ ಕ್ಷೇತ್ರದ (Bangalore Rural Lok Sabha constituency) ಬಿಜೆಪಿ ಅಭ್ಯರ್ಥಿ ಡಾ.ಸಿ.ಎನ್. ಮಂಜುನಾಥ್ (DR CN Manjunath) ಬುದ್ಧಿವಂತ ರಾಜಕಾರಣಿಯಾಗಿದ್ದು, ಮಾಜಿ ಪ್ರಧಾನಿ ದೇವೇಗೌಡ ಪಕ್ಷ ಸರಿ ಇಲ್ಲ ಎಂದು ಬಿಜೆಪಿಯಿಂದ ಸ್ಪರ್ಧಿಸುತ್ತಿದ್ದಾರೆ ಎಂಬ ಸಂಸದ ಡಿ.ಕೆ.ಸುರೇಶ್ (DK Suresh) ಹೇಳಿಕೆಗೆ ಜೆಡಿಎಸ್ (JDS Karnataka) ಖಡಕ್‌ ತಿರುಗೇಟು ನೀಡಿದೆ. ಬೆಂಗಳೂರು ಗ್ರಾಮಾಂತರ ಲೋಕಸಭೆ ಕ್ಷೇತ್ರದ ಹೋರಾಟವು ನಿಸ್ವಾರ್ಥ ಮತ್ತು ಸ್ವಾರ್ಥ, ಸೇವೆ ಮತ್ತು ಸುಲಿಗೆ, ಒಳಿತು ಮತ್ತು ಕೆಡುಕಿನ ನಡುವೆ ಹೋರಾಟ ಎಂದು ಬಣ್ಣಿಸಿದೆ.

ಈ ಬಗ್ಗೆ ತನ್ನ ಎಕ್ಸ್ ಖಾತೆಯಲ್ಲಿ ಪೋಸ್ಟ್‌ ಮಾಡಿರುವ ಜೆಡಿಎಸ್‌, “ಡಾ.ಸಿ.ಎನ್.ಮಂಜುನಾಥ್ v/s ಡಿ.ಕೆ.ಸುರೇಶ್; ನಿಸ್ವಾರ್ಥ vs ಸ್ವಾರ್ಥ!; ಸೇವೆ v/s ಸುಲಿಗೆ!!; ಒಳಿತು v/s ಕೆಡುಕು!!!” ಇದಕ್ಕೆ ಮಿಗಿಲಾಗಿ ಹೆಚ್ಚಿನದನ್ನು ಹೇಳುವ ಅಗತ್ಯವಿಲ್ಲ ಎಂದು ವಾಗ್ದಾಳಿ ನಡೆಸಿದೆ.

ನೀವೇನು? ಮಂಜುನಾಥ್‌ ಏನು?

ಡಿ.ಕೆ. ಸುರೇಶ್ ರವರೇ ನೀವೇನು? ಡಾ.ಸಿ.ಎನ್. ಮಂಜುನಾಥ್ ಅವರೇನು? ಎನ್ನುವುದು ರಾಜ್ಯಕ್ಕಷ್ಟೇ ಅಲ್ಲ, ಇಡೀ ಭಾರತ ದೇಶಕ್ಕೇ ಗೊತ್ತಿದೆ. ಅನಗತ್ಯವಾಗಿ ನಾಲಿಗೆ ಜಾರಿ ಗುಣ ಹಾಳು ಮಾಡಿಕೊಳ್ಳಬೇಡಿ. ಆರೋಗ್ಯ ಕ್ಷೇತ್ರದಲ್ಲಿ ಎಣೆ ಇಲ್ಲದಷ್ಟು ಸೇವೆ ಮಾಡಿ ಲಕ್ಷಾಂತರ ಬಡಜನರ ಹೃದಯದಲ್ಲಿ ನೆಲೆಸಿರುವ ಡಾ.ಸಿ.ಎನ್.ಮಂಜುನಾಥ್ ಅವರ ಬಗ್ಗೆ ಅನಾರೋಗ್ಯಕರ ಅಪಪ್ರಚಾರದಲ್ಲಿ ನೀವು ನಿರತರಾಗಿದ್ದೀರಿ. ಸೋಲಿನ ದುಸ್ವಪ್ನದಿಂದ ನೀವು ಬಳಲುತ್ತಿರುವುದು ಸ್ಪಷ್ಟ ಎಂದು ಜೆಡಿಎಸ್ ತಿರುಗೇಟು ಕೊಟ್ಟಿದೆ.

ಫ್ಯಾಮಿಲಿ ಪಾಲಿಟಿಕ್ಸೋ ಅಥವಾ ಫ್ಯಾಮಿಲಿ ಪ್ಯಾಕೇಜೋ?

ದೇವೇಗೌಡರ ಕುಟುಂಬದ ಬಗ್ಗೆ ಮಾತನಾಡುವ ನೈತಿಕತೆ ನಿಮಗೆಲ್ಲಿದೆ? ಇಡೀ ರಾಜ್ಯ ನಿಮ್ಮ ಕಬಂಧಬಾಹುಗಳಲ್ಲಿ ಬಂಧಿಯಾಗಿದೆ. ಅಣ್ಣ ಡಿಸಿಎಂ, ತಮ್ಮ ಎಂಪಿ, ಸಹೋದರಿಯ ಗಂಡ ವಿಧಾನ ಪರಿಷತ್ ಸದಸ್ಯ, ಇನ್ನೊಬ್ಬರು ಕುಣಿಗಲ್ ಶಾಸಕ. ಇದೇನು ಫ್ಯಾಮಿಲಿ ಪಾಲಿಟಿಕ್ಸೋ ಅಥವಾ ಫ್ಯಾಮಿಲಿ ಪ್ಯಾಕೇಜೋ? ನೀವು ಏನೆಂದು ಕರೀತೀರಿ ಡಿ.ಕೆ. ಸುರೇಶ್ ಅವರೇ? ಎಂದು ಖಾರವಾಗಿ ಪ್ರಶ್ನಿಸಿದೆ ಜೆಡಿಎಸ್.

ವ್ಯರ್ಥ ಆಲಾಪ ಏಕೆ ಸುರೇಶ್ ಅವರೇ?

ಅಳಿಯ ಜಾಣ ಆಗೋದು ತಪ್ಪಲ್ಲ. ನಿಮ್ಮಂತೆ ಇನ್ನೊಬ್ಬರ ಜೀವನಕ್ಕೆ ಎರವಾಗೋದು ತಪ್ಪಲ್ಲವೇ? ಡಾ.ಮಂಜುನಾಥ್ ಅವರು ಯಾವ ಪಕ್ಷದಿಂದ ಸ್ಪರ್ಧಿಸಿದರೆ ನಿಮಗೇನು? ಅವರು ಬೆಂಗಳೂರು ಗ್ರಾಮಾಂತರ ಕ್ಷೇತ್ರದಲ್ಲಿ ನಿಮ್ಮ ಎದುರಾಳಿ, ಸೆಣಸಿ. ಅದು ಬಿಟ್ಟು ವ್ಯರ್ಥ ಆಲಾಪ ಏಕೆ ಸುರೇಶ್ ರವರೇ? ಎಂದು ಜೆಡಿಎಸ್ ಟಾಂಗ್ ನೀಡಿದೆ.

ಇದನ್ನೂ ಓದಿ: Lok Sabha Election 2024: ವಿಧಾನ ಪರಿಷತ್‌ಗೆ ಈಶ್ವರಪ್ಪ ಪುತ್ರ ಕೆ.ಇ. ಕಾಂತೇಶ್‌: ಸುಳಿವು ಕೊಟ್ಟ ಬಿಎಸ್‌ವೈ

ನಿಮ್ಮ ತಟ್ಟೆಯಲ್ಲಿ ಹೆಗ್ಗಣ ಬಿದ್ದಿದೆ

ದೇವೇಗೌಡರ ಪಾರ್ಟಿ ಕಥೆ ಇರಲಿ, ನಿಮ್ಮ ಪಾರ್ಟಿ ಹಣೆಬರಹ ನೋಡಿಕೊಳ್ಳಿ. ದೇಶದ ಉದ್ದಗಲಕ್ಕೂ ಕಾಂಗ್ರೆಸ್ ಕರ್ಮಕಾಂಡದ ಬಗ್ಗೆ ಹೇಳುತ್ತಾ ಹೋದರೆ ಅದೇ ಮಹಾ ಕಾದಂಬರಿ ಆಗುತ್ತದೆ. ನಿಮ್ಮ ತಟ್ಟೆಯಲ್ಲಿ ಹೆಗ್ಗಣ ಬಿದ್ದಿದೆ, ಪಕ್ಕದವರ ತಟ್ಟೆಯಲ್ಲಿ ನೊಣ ಹುಡುಕುವ ದಡ್ಡತನವೇಕೆ? ಅಕ್ವರ್ಡ್ ಪದಕ್ಕೆ ನಿಮಗಿಂತ ಸರಿಯಾದ ಅನ್ವರ್ಥ ಇದೆಯೇ? ಏನಂತೀರಿ? ಎಂದು ಜೆಡಿಎಸ್ ಪ್ರಶ್ನಿಸಿದೆ.

ಕ್ಷಣ ಕ್ಷಣದ ಮಾಹಿತಿಗಾಗಿ Vistara News FaceBook ಪೇಜ್ ಫಾಲೋ ಮಾಡಿ
ಮಹತ್ವದ ಮಾಹಿತಿಗಾಗಿ ವಿಸ್ತಾರ ನ್ಯೂಸ್ ಆ್ಯಪ್ ಉಚಿತವಾಗಿ ಡೌನ್ ಲೋಡ್ ಮಾಡಿಕೊಳ್ಳಿ: Andriod App | IOS App
Continue Reading
Click to comment

Leave a Reply

Your email address will not be published. Required fields are marked *

ಪ್ರಮುಖ ಸುದ್ದಿ

Lok Sabha Election : ಷೇರು ಮಾರುಕಟ್ಟೆ ಸಂಸ್ಥೆಯ ಪ್ರಕಾರ ಬಿಜೆಪಿ ಕಳೆದ ಬಾರಿಗಿಂತ ಹೆಚ್ಚು ಸೀಟು ಗೆಲ್ಲಲಿದೆ; ಲೆಕ್ಕಾಚಾರ ಹೀಗಿದೆ

Lok Sabha Election : ಏಪ್ರಿಲ್ 19ರಂದು ಚುನಾವಣೆಗಳು ಪ್ರಾರಂಭವಾದಾಗಿನಿಂದ ಪ್ರಮುಖ ಷೇರು ಸೂಚ್ಯಂಕಗಳಾದ ಸೆನ್ಸೆಕ್ಸ್ ಮತ್ತು ನಿಫ್ಟಿ ತಲಾ 3 ಪ್ರತಿಶತದಷ್ಟು ಪ್ರಗತಿ ಕಂಡಿದೆ. ಕಡಿಮೆ ಮತದಾನ ಹಾಗೂ ಸರ್ಕಾರದ ಅಸ್ಥಿರತೆಯ ಬಗ್ಗೆ ಇದ್ದ ಆರಂಭಿಕ ಕಳವಳಗಳು ನಿಧಾನವಾಗಿದೆ. ಆದರೆ, ಫಿಯರ್ ಗೇಜ್ ಇಂಡಿಯಾ ವಿಐಎಕ್ಸ್ ಪ್ರಕಾರ ಮಾರುಕಟ್ಟೆ ಚಂಚಲತೆ ಮುಂದುವರಿದಿದೆ.

VISTARANEWS.COM


on

Lok Sabha Election
Koo

ಬೆಂಗಳೂರು: ಲೋಕಸಭಾ ಚುನಾವಣೆಯ (Lok Sabha Election) ಆರು ಹಂತಗಳ ಮತದಾನ ಪ್ರಕ್ರಿಯೆ ಮುಕ್ತಾಯಗೊಂಡಿರುವ ಹಿನ್ನೆಲೆಯಲ್ಲಿ ಆನ್​ಲೈನ್​ ಸ್ಟಾಕ್ ಟ್ರೇಡಿಂಗ್ ಮತ್ತು ಹೂಡಿಕೆ ಸಂಸ್ಥೆಯಾಗಿರುವ ಐಐಎಫ್ಎಲ್ ಸೆಕ್ಯುರಿಟೀಸ್ ತನ್ನ ಸಮೀಕ್ಷೆಯನ್ನು ಪ್ರಕಟಿಸಿದೆ. ಅದರ ಪ್ರಕಾರ ಈ ಬಾರಿ ಬಿಜೆಪಿ 320 ಸ್ಥಾನಗಳನ್ನು ಸಲೀಸಾಗಿ ಗೆಲ್ಲಲಿದೆ. ಇದು 2019ರ 303 ಸೀಟ್​ಗಳಿಂತ ಅಧಿಕ. ಆರನೇ ಹಂತದ ಮತದಾನ ಸೇರಿದಂತೆ ಬಿಜೆಪಿಗೆ ಹೆಚ್ಚು ಮತಗಳು ಬೀಳುವ ಹಿಂದಿ ಹೃದಯಭಾಗದ ರಾಜ್ಯಗಳಲ್ಲಿ 3 ಶೇಕಡಾ ಮತ ಚಲಾವಣೆ ಕುಸಿತ ಕಂಡಿದೆ. (ಹಿಂದಿಯೇತರ ರಾಜ್ಯಗಳಲ್ಲಿ 0.6 ಶೇಕಡಾ ಕುಸಿತ) ಇದು ಬಿಜೆಪಿಗೆ ನಷ್ಟ ಎಂದು ಅಂದಾಜಿಸಲಾಗುತ್ತದೆ. ಇದರ ಹೊರತಾಗಿಯೂ, ಉತ್ತರ ಪ್ರದೇಶ (ಎಸ್ಪಿ-ಬಿಎಸ್ಪಿ ಮೈತ್ರಿಯ ಅನುಪಸ್ಥಿತಿ), ಒಡಿಶಾ, ಪಶ್ಚಿಮ ಬಂಗಾಳ, ತೆಲಂಗಾಣ ಮತ್ತು ಆಂಧ್ರಪ್ರದೇಶದಲ್ಲಿ ಸಿಗುವ ಸ್ಥಾನಗಳ ಲಾಭಗಳ ಮೂಲಕ ಬಿಜೆಪಿ ಬಹುಮತ ಹೆಚ್ಚಿಸಿಕೊಳ್ಳಲಿದೆ ಎಂದು ಬ್ರೋಕರೇಜ್ ಸಂಸ್ಥೆ ಅಂದಾಜಿಸಿದೆ.

ಒಟ್ಟು ಆರು ಹಂತಗಳ ಮತದಾನ ಮುಕ್ತಾಯವಾಗಿದ್ದು ಶೇಕಡಾ 89ರಷ್ಟು ಮತಗಳು ಚಲಾವಣೆಯಾಗಿದೆ. ಈ 486 ಸ್ಥಾನಗಳ ಪೈಕಿ ಬಿಜೆಪಿ 278 ಸ್ಥಾನಗಳಲ್ಲಿ ಗೆಲುವು ಸಾಧಿಸಿಲಿದೆ. ಜೂನ್ 1 ರಂದು ನಡೆಯಲಿರುವ ಕೊನೆಯ ಹಂತದ ಚುನಾವಣೆಗೆ ಮುಂಚಿತವಾಗಿ ಮೊದಲ ಎರಡು ಹಂತಗಳಲ್ಲಿ ಮತದಾನದ ಪ್ರಮಾಣ ಕುಸಿತ ಕಂಡಿದೆ. ಆದಾಗ್ಯೂ ಬಿಜೆಪಿ 320ರ ಗಡಿ ಮುಟ್ಟುವುದು ಖಚಿತ ಎಂದು ಅದು ಅಂದಾಜಿಸಿದೆ. ಇದೇ ವೇಳೆ ಕೊನೇ ಹಂತದ ಮತದಾನ 2019 ರ ಮಟ್ಟಕ್ಕಿಂತ ಸ್ವಲ್ಪ ಕಡಿಮೆಯಾಗಬಹುದು ಸಮೀಕ್ಷೆ ಹೇಳಿದೆ.

ಏಪ್ರಿಲ್ 19ರಂದು ಚುನಾವಣೆಗಳು ಪ್ರಾರಂಭವಾದಾಗಿನಿಂದ ಪ್ರಮುಖ ಷೇರು ಸೂಚ್ಯಂಕಗಳಾದ ಸೆನ್ಸೆಕ್ಸ್ ಮತ್ತು ನಿಫ್ಟಿ ತಲಾ 3 ಪ್ರತಿಶತದಷ್ಟು ಪ್ರಗತಿ ಕಂಡಿದೆ. ಕಡಿಮೆ ಮತದಾನ ಹಾಗೂ ಸರ್ಕಾರದ ಅಸ್ಥಿರತೆಯ ಬಗ್ಗೆ ಇದ್ದ ಆರಂಭಿಕ ಕಳವಳಗಳು ನಿಧಾನವಾಗಿದೆ ಕಡಿಮೆಯಾಗಿದೆ. ಆದರೆ, ಫಿಯರ್ ಗೇಜ್ ಇಂಡಿಯಾ ವಿಐಎಕ್ಸ್ ಪ್ರಕಾರ ಮಾರುಕಟ್ಟೆ ಚಂಚಲತೆ ಮುಂದುವರಿದಿದೆ.

ಇದನ್ನೂ ಓದಿ: Lok Sabha Election : ಲವ್​ ಜಿಹಾದ್ ಶುರುವಾಗಿದ್ದೇ ಜಾರ್ಖಂಡ್​ನಿಂದ; ಜೆಎಮ್​ಎಮ್​ ವಿರುದ್ಧ ಮೋದಿ ಗಂಭೀರ ಆರೋಪ

1951-67ನ್ನು ಹೊರತುಪಡಿಸಿ ಭಾರತದಲ್ಲಿ ಸತತವಾಗಿ ನಡೆದ 3 ಲೋಕಸಭಾ ಚುನಾವಣೆಗಳಲ್ಲಿ ಮತದಾನದ ಪ್ರಮಾಣ ಹೆಚ್ಚಳಗೊಂಡ ಉದಾಹರಣೆಗಳು ಇಲ್ಲ. ಅಂತೆಯೇ 2014 ಮತ್ತು 2019 ರ ಚುನಾವಣೆಗಳಲ್ಲಿ ಮತದಾನದ ಪ್ರಮಾಣ ಹೆಚ್ಚಳ ಕಂಡ ನಂತರ 2024 ರ ಚುನಾವಣೆಯಲ್ಲಿ ಯಥಾವತ್​ ಪ್ರಮಾಣ ಸ್ವಲ್ಪ ಕುಸಿತ ಕಂಡಿದೆ ಎಂದು ಐಐಎಫ್ಎಲ್ ಸೆಕ್ಯುರಿಟೀಸ್ ಹೇಳಿದೆ.

ಐಐಎಫ್ಎಲ್ ಸೆಕ್ಯುರಿಟೀಸ್ ಪ್ರಕಾರ, ಉತ್ತರ ಪ್ರದೇಶದಲ್ಲಿ ಬಿಜೆಪಿ 2019 ರ ಒಟ್ಟು ಸ್ಥಾನಕ್ಕೆ ಇನ್ನೂ 10 ಸ್ಥಾನಗಳನ್ನು ಸೇರ್ಪಡೆಗೊಳಿಸಲಿದೆ. ಅಂದರೆ ಒಟ್ಟು 80ರಲ್ಲಿ 72 ಬಿಜೆಪಿ ಪಾಲಾಗಲಿದೆ. 2019ರಲ್ಲಿ ಅದು 62 ಆಗಿತ್ತು. ನರೇಂದ್ರ ಮೋದಿ ನೇತೃತ್ವದ ಪಕ್ಷವು ಒಡಿಶಾ ಮತ್ತು ಪಶ್ಚಿಮ ಬಂಗಾಳದಲ್ಲಿ 2019ಕ್ಕಿಂತ ತಲಾ 5 ಹೆಚ್ಚುವರಿ ಸ್ಥಾನಗಳನ್ನು ಗಳಿಸಲದೆ. ಬಂಗಾಳದಲ್ಲಿ 18ರಿಂದ 23ಕ್ಕೆ ಏರಿಕೆಯಾದರೆ, ಒಡಿಶಾದಲ್ಲಿ 8ರಿಂದ 13ಕ್ಕೆ ಜಿಗಿಯಲಿದೆ. ಅಲ್ಲದೆ, ತೆಲಂಗಾಣ ಮತ್ತು ಆಂಧ್ರಪ್ರದೇಶ ತಲಾ 3 ಸ್ಥಾನಗಳನ್ನು ಪಡೆಯಲಿದೆ.

ಬೇಸ್​ ಪಾಯಿಂಟ್​ಗಳ ಕುಸಿತ

6 ಹಂತಗಳ ಚುನಾವಣೆ ಪ್ರಕ್ರಿಯೆ ಮುಗಿದ ನಂತರ ಮತದಾನದ ಪ್ರಮಾಣದಲ್ಲಿ ಸರಾಸರಿ 150 ಬೇಸಿಸ್ ಪಾಯಿಂಟ್​​ಗಳ ಕುಸಿತ ಕಂಡುಬಂದಿದೆ. ಮೊದಲ ಹಂತದಲ್ಲಿ ಮತದಾನದ 400 ಬೇಸಿಸ್ ಪಾಯಿಂಟ್​ಗಳ ಕುಸಿತ ಹೋಲಿಸಿದರೆ ಇದು ಕಡಿಮೆ. ಹಂತ 4 ಮತ್ತು 5ನೇ ಹಂತದಲ್ಲಿ 2019 ಕ್ಕೆ ಹೋಲಿಸಿದರೆ ಅಲ್ಪ ಏರಿಕೆ ಕಂಡಿದ್ದು. 6 ನೇ ಹಂತವು ಅಲ್ಪ ಕುಸಿತ ದಾಖಲಾಗಿದೆ ಐಐಎಫ್ಎಲ್ ಸೆಕ್ಯುರಿಟೀಸ್ ಹೇಳಿದೆ.

2019 ರ ಚುನಾವಣೆಗೆ ಹೋಲಿಸಿದರೆ 486 ಸ್ಥಾನಗಳಲ್ಲಿ ಒಟ್ಟು 156 ಸ್ಥಾನಗಳಲ್ಲಿ ಮತದಾನದ ಪ್ರಮಾಣ ಹೆಚ್ಚಾಗಿದೆ ಎಂದು ಐಐಎಫ್ಎಲ್ ಸೆಕ್ಯುರಿಟೀಸ್ ತಿಳಿಸಿದೆ.

ಅನಿರೀಕ್ಷಿತ ಫಲಿತಾಂಶ ಅಸಾಧ್ಯ

ಬಿಜೆಪಿ ಮತ್ತು ಕಾಂಗ್ರೆಸ್ ನಡುವೆ ಭಾರಿ ಪ್ರಮಾಣದ ಮತ ಹಂಚಿಕೆ ವ್ಯತ್ಯಾಸ ಆಗಿದೆ. ಹೀಗಾಗಿ 2024 ರ ಚುನಾವಣೆಯ ಫಲಿತಾಂಶ 2004 ರ ಚುನಾವಣೆಗಳಂತೆ ಅಚ್ಚರಿಯ ಫಲಿತಾಂಶವನ್ನು ಪ್ರಕಟಿಸುವುದಿಲ್ಲ ಎಂದು ಐಐಎಫ್ಎಲ್ ದೃಢವಾಗಿ ಹೇಳಿದೆ.

ಕರ್ನಾಟಕದಲ್ಲಿ ನಷ್ಟ

“ಮೈತ್ರಿ / ಅಭ್ಯರ್ಥಿ ಆಯ್ಕೆ ಸಮಸ್ಯೆಗಳಿಂದಾಗಿ ರಾಜಸ್ಥಾನ, ಕರ್ನಾಟಕ ಮತ್ತು ಹರಿಯಾಣ ರಾಜ್ಯಗಳಲ್ಲಿ ಬಿಜೆಪಿಗೆ ನಷ್ಟವಾಗಬಹುದು. ಆದರೆ, ಮಹಾರಾಷ್ಟ್ರದಲ್ಲಿ ಎನ್​ಡಿಎ 2 ಸ್ಥಾನಗಳನ್ನು ಹೆಚ್ಚಿಸಿಕೊಳ್ಳಲಿದೆ ಎಂದು ಅಂದಾಜಿಸಿದೆ. 2019 ರಲ್ಲಿ 224 ಸ್ಥಾನಗಳಲ್ಲಿ ಶೇಕಡಾ 50ಕ್ಕಿಂತ ಹೆಚ್ಚು ಮತ ಪಡೆಯುವ ಮೂಲಕ ಬಿಜೆಪಿ ತನ್ನ ಬಹುಮತವನ್ನು ಉಳಿಸಿಕೊಳ್ಳುತ್ತದೆ ಐಐಎಫ್ಎಲ್ ಸೆಕ್ಯುರಿಟೀಸ್ ಹೇಳಿದೆ.

Continue Reading

ಪ್ರಮುಖ ಸುದ್ದಿ

Lok Sabha Election : ಲವ್​ ಜಿಹಾದ್ ಶುರುವಾಗಿದ್ದೇ ಜಾರ್ಖಂಡ್​ನಿಂದ; ಜೆಎಮ್​ಎಮ್​ ವಿರುದ್ಧ ಮೋದಿ ಗಂಭೀರ ಆರೋಪ

lok sabha Election : ಜಾರ್ಖಂಡ್ ರಾಜ್ಯದಲ್ಲಿ ಹಣದ ಶಿಖರಗಳು ನಿರ್ಮಾಣಗೊಂಡಿವೆ. ಜೆಎಂಎಂ-ಕಾಂಗ್ರೆಸ್ ವ್ಯಾಪಕ ಲೂಟಿಯಲ್ಲಿ ತೊಡಗಿದೆ ಎಂದು ಹೇಳಿದರು. ಜೂನ್ 4 ರ ನಂತರ ತಮ್ಮ ನೇತೃತ್ವದ ನೂತನ ಕೇಂದ್ರ ಸರ್ಕಾರ ಭ್ರಷ್ಟಾಚಾರದ ವಿರುದ್ಧ ತನ್ನ ಕ್ರಮ ತೀವ್ರಗೊಳಿಸುತ್ತದೆ ಎಂದು ನರೇಂದ್ರ ಮೋದಿ ಪ್ರತಿಜ್ಞೆ ಮಾಡಿದರು.

VISTARANEWS.COM


on

Lok Sabha Election
Koo

ರಾಂಚಿ: ಲೋಕ ಸಭಾ ಚುನಾವಣೆ (Lok Sabha Election) ಕೊನೇ ಹಂತದ ಮತದಾದನ ಹಿನ್ನೆಲೆಯಲ್ಲಿ ಜಾರ್ಖಂಡ್​ನಲ್ಲಿ ಪ್ರಚಾರ ಸಭೆಗಳನ್ನು ಆಯೋಜಿಸಿರುವ ಪ್ರಧಾನಿ ನರೇಂದ್ರ ಮೋದಿ ಅವರು ಅಲ್ಲಿನ ಆಡಳಿತಾರೂಢ ಜಾರ್ಖಂಡ್​ ಮುಕ್ತಿ ಮೋರ್ಚಾದ (ಜೆಎಮ್​ಎಮ್​) ವಿರುದ್ಧ ಹಲವಾರು ಆರೋಪಗಳನ್ನು ಮಾಡಿದರು. ಜಾರ್ಖಂಡ್​ನ ದುಮ್ಕಾದಲ್ಲಿ ಮಂಗಳವಾರ ನಡೆದ ರ್ಯಾಲಿಯನ್ನುದ್ದೇಶಿಸಿ ಮಾತನಾಡಿದ ಪ್ರಧಾನಿ ನರೇಂದ್ರ ಮೋದಿ, ಹಿಂದೂ ಧರ್ಮಕ್ಕೆ ಅಪಾಯಕಾರಿಯಾಗಿ ಪರಿಣಮಿಸಿರುವ ‘ಲವ್ ಜಿಹಾದ್’ ಆರಂಭಗೊಂಡಿರುವುದೇ ಜಾರ್ಖಂಡ್​ನಿಂದ ಎಂದು ಹೇಳಿಕೆ ನೀಡಿದ್ದಾರೆ.

ಜೆಎಂಎಂ ನಿರಂತರವಾಗಿ ಕೋಮುವಾದಿ ರಾಜಕೀಯದಲ್ಲಿ ತೊಡಗಿದೆ ಎಂದು ಆರೋಪಿಸಿದ ಮೋದಿ, ಜಾರ್ಖಂಡ್​ ನ ಒಂದು ಜಿಲ್ಲೆಯಲ್ಲಿ ಭಾನುವಾರದ ಸಾಂಪ್ರದಾಯಿಕ ರಜಾದಿನವನ್ನು ಶುಕ್ರವಾರಕ್ಕೆ ಬದಲಾಯಿಸಲಾಗಿದೆ ಎಂದು ಹೇಳಿದರು. ವಾಸ್ತವದಲ್ಲಿ ಭಾನುವಾರ ಹಿಂದೂಗಳಿಗೆ ಸಂಬಂಧಿಸಿದ್ದಲ್ಲ ಕ್ರಿಶ್ಚಿಯನ್ ಸಮುದಾಯಕ್ಕೆ ಸಂಬಂಧಿಸಿದೆ. 200-300 ವರ್ಷಗಳಿಂದ ರಜಾದಿನವಾಗಿ ಪರಿಗಣಿಸಲಾಗಿದೆ. ಈಗ ಅದನ್ನು ಶುಕ್ರವಾರಕ್ಕೆ ಬದಲಾಯಿಸಲಾಗಿದೆ ಎಂದು ಮೋದಿ ಆರೋಪಿಸಿದ್ದಾರೆ.

ಲೂಟಿ ಆರೋಪಗಳು

ರ್ಯಾಲಿಯಲ್ಲಿ ಮಾತನಾಡಿದ ಮೋದಿ, ಜೆಎಂಎಂ ಮತ್ತು ಕಾಂಗ್ರೆಸ್ ಮಿತಿಮೀರಿದ ಲೂಟಿಯಲ್ಲಿ ತೊಡಗಿವೆ ಎಂದು ಆರೋಪಿಸಿದರು, ಜಾರ್ಖಂಡ್ ರಾಜ್ಯದಲ್ಲಿ ಹಣದ ಶಿಖರಗಳು ನಿರ್ಮಾಣಗೊಂಡಿವೆ. ಜೆಎಂಎಂ-ಕಾಂಗ್ರೆಸ್ ವ್ಯಾಪಕ ಲೂಟಿಯಲ್ಲಿ ತೊಡಗಿದೆ ಎಂದು ಹೇಳಿದರು. ಜೂನ್ 4 ರ ನಂತರ ತಮ್ಮ ನೇತೃತ್ವದ ನೂತನ ಕೇಂದ್ರ ಸರ್ಕಾರ ಭ್ರಷ್ಟಾಚಾರದ ವಿರುದ್ಧ ತನ್ನ ಕ್ರಮ ತೀವ್ರಗೊಳಿಸುತ್ತದೆ ಎಂದು ಅವರು ಪ್ರತಿಜ್ಞೆ ಮಾಡಿದರು.

ಇದನ್ನೂ ಓದಿ: Lok Sabha Election : ಕನ್ಯಾಕುಮಾರಿಯಲ್ಲಿ 48 ಗಂಟೆಗಳ ಕಾಲ ಧ್ಯಾನ ಮಾಡಲಿದ್ದಾರೆ ಮೋದಿ

2014ಕ್ಕೂ ಮೊದಲು ಕಾಂಗ್ರೆಸ್ ದಿನದ 24 ಗಂಟೆಯೂ ಲೂಟಿಯಲ್ಲಿ ತೊಡಗಿದ್ದರಿಂದ ಹಗರಣಗಳು ಸಾಮಾನ್ಯವಾಗಿದ್ದವು, ಆದರೆ ತಾವು ಅಧಿಕಾರಕ್ಕೆ ಬಂದ ನಂತರ ಅದನ್ನು ನಿಲ್ಲಿಸಿಸಲಾಯಿತು ಎಂದು ಹೇಳಿದರು

ನುಸುಳುಕೋರರ ಸಮಸ್ಯೆ

ಒಳನುಸುಳುವಿಕೆಯಿಂದಾಗಿ ಸಂತಾಲ್ ಪರಗಣಗಳಲ್ಲಿ ಬುಡಕಟ್ಟು ಜನಸಂಖ್ಯೆ ಕಡಿಮೆಯಾಗುತ್ತಿದೆ ಎಂದು ಮೋದಿ ಆರೋಪಿಸಿದರು. ಜಾರ್ಖಂಡ್​ನಲ್ಲಿ ಆಡಳಿತಾರೂಢ ಜೆಎಂಎಂ ನೇತೃತ್ವದ ಮೈತ್ರಿಕೂಟವು “ನುಸುಳುಕೋರರನ್ನು ಪೋಷಿಸುತ್ತಿದೆ” ಎಂದು ಅವರು ಆರೋಪಿಸಿದರು. ಬುಡಕಟ್ಟು ಜನರ ಭೂಮಿಯನ್ನು ನುಸುಳುಕೋರರು ವಶಪಡಿಸಿಕೊಳ್ಳುತ್ತಿದ್ದಾರೆ. ಅವರು ಮಹಿಳೆಯರಿಗೆ ಅಪಾಯವನ್ನುಂಟು ಮಾಡುತ್ತಿದ್ದಾರೆ” ಎಂದು ಆರೋಪಿಸಿದರು.

“ಜಾರ್ಖಂಡ್​ನಲ್ಲಿ ದೊಡ್ಡ ಬಿಕ್ಕಟ್ಟು ತಲೆದೋರಿದೆ. ಅದುವೇ ಒಳನುಸುಳುವಿಕೆ. ಸಂತಾಲ್ ಪರಗಣಗಳು ಒಳನುಸುಳುವಿಕೆಯ ಸವಾಲನ್ನು ಎದುರಿಸುತ್ತಿವೆ. ಅನೇಕ ಪ್ರದೇಶಗಳಲ್ಲಿ, ಬುಡಕಟ್ಟು ಜನರ ಜನಸಂಖ್ಯೆ ವೇಗವಾಗಿ ಕುಸಿಯುತ್ತಿದೆ ಮತ್ತು ಒಳನುಸುಳುವವರ ಸಂಖ್ಯೆ ಹೆಚ್ಚುತ್ತಿದೆ. ನುಸುಳುಕೋರರು ಬುಡಕಟ್ಟು ಜನರ ಭೂಮಿಯನ್ನು ಕಸಿದುಕೊಳ್ಳುತ್ತಿದ್ದಾರೆ. ಬುಡಕಟ್ಟು ಹೆಣ್ಣುಮಕ್ಕಳು ನುಸುಳುಕೋರರ ದಾಳಿಗೆ ಗುರಿಯಾಗಿದ್ದಾರೆ. ಅವರ ಭದ್ರತೆ ಮತ್ತು ಸುರಕ್ಷತೆ ಅಪಾಯದಲ್ಲಿದೆ. ಅವರ ಜೀವವೂ ಅಪಾಯದಲ್ಲಿದೆ” ಎಂದು ಅವರು ಹೇಳಿದರು.

2022 ರ ಘಟನೆಗಳನ್ನು ಉಲ್ಲೇಖಿಸಿದ ಮೋದಿ, “ಬುಡಕಟ್ಟು ಹೆಣ್ಣುಮಕ್ಕಳನ್ನು 50 ತುಂಡುಗಳಾಗಿ ಕತ್ತರಿಸಲಾಗುತ್ತಿದೆ. ಜೀವಂತವಾಗಿ ಸುಡಲಾಗುತ್ತಿದೆ ನಾಲಿಗೆಯನ್ನು ಹೊರತೆಗೆಯಲಾಗಿದೆ. ಬುಡಕಟ್ಟು ಹೆಣ್ಣುಮಕ್ಕಳನ್ನು ಗುರಿಯಾಗಿಸುತ್ತಿರುವ ಈ ಜನರು ಯಾರು? ಜೆಎಂಎಂ ಸರ್ಕಾರ ಅವರನ್ನು ಏಕೆ ಪೋಷಿಸುತ್ತಿದೆ ಎಂದು ಮೋದಿ ಪ್ರಶ್ನಿಸಿದರು. ಮುಂದಿನ ಐದು ವರ್ಷಗಳಲ್ಲಿ ದೇಶವು ಹಿಂದಿನ ದಶಕಕ್ಕಿಂತ ಹೆಚ್ಚಿನ ಅಭಿವೃದ್ಧಿಗೆ ಸಾಕ್ಷಿಯಾಗಲಿದೆ ಎಂದು ಅವರು ಭರವಸೆ ನೀಡಿದರು.

Continue Reading

Lok Sabha Election 2024

Lok Sabha Election : ಕನ್ಯಾಕುಮಾರಿಯಲ್ಲಿ 48 ಗಂಟೆಗಳ ಕಾಲ ಧ್ಯಾನ ಮಾಡಲಿದ್ದಾರೆ ಮೋದಿ

Lok Sabha Election : ಕನ್ಯಾಕುಮಾರಿಯಲ್ಲಿ, ಪಿಎಂ ಮೋದಿ ರಾಕ್ ಮೆಮೋರಿಯಲ್​ಗೆ ಭೇಟಿ ನೀಡಲಿದ್ದಾರೆ ಮತ್ತು ಮೇ 30 ರ ಸಂಜೆಯಿಂದ ಜೂನ್ 1 ರವರೆಗೆ ಧ್ಯಾನ ಮಂಟಪದಲ್ಲಿ ಸ್ವಾಮಿ ವಿವೇಕಾನಂದರು ಧ್ಯಾನ ಮಾಡಿದ ಸ್ಥಳದಲ್ಲಿಯೇ ಹಗಲು ರಾತ್ರಿ ಧ್ಯಾನ ಮಾಡಲಿದ್ದಾರೆ.

VISTARANEWS.COM


on

Lok Sabha Election
Koo

ನವದೆಹಲಿ: ಲೋಕಸಭಾ ಚುನಾವಣಾ ಪ್ರಚಾರ ಕಾರ್ಯಕ್ಕಾಗಿ ಕಳೆದ ಮೂರ್ನಾಲ್ಕು ತಿಂಗಳಿಂದ ದೇಶಾದ್ಯಂತ ಸಂಚರಿಸುತ್ತಿರುವ ಪ್ರಧಾನಿ ನರೇಂದ್ರ ಮೋದಿ ಅವರು ಕೊನೇ ಹಂತದ ಚುನಾವಣಾ ಪ್ರಚಾರ ಮುಗಿದ ಬಳಿಕ ಅಂದರೆ ಮೇ 30 ರಂದು ತಮಿಳುನಾಡಿನ ಕನ್ಯಾಕುಮಾರಿ ಜಿಲ್ಲೆಯ ವಿಶ್ವ ಪ್ರಸಿದ್ಧ ವಿವೇಕಾನಂದ ರಾಕ್ ಮೆಮೋರಿಯಲ್ ಗೆ ಆಧ್ಯಾತ್ಮಿಕ ಪ್ರವಾಸಕ್ಕಾಗಿ ಆಗಮಿಸಲಿದ್ದಾರೆ. 73 ವರ್ಷದ ಪ್ರಧಾನಿ ಮೋದಿ ಅವರು ಸ್ವಾಮಿ ವಿವೇಕಾನಂದರು ಧ್ಯಾನ ಮಾಡಿದ ಸ್ಥಳವಾದ ಸ್ಮಾರಕದಲ್ಲಿ 48 ಗಂಟೆಗಳ ಕಾಲ ಧ್ಯಾನ ಮಾಡಲಿದ್ದಾರೆ ಎಂದು ಮೂಲಗಳು ತಿಳಿಸಿವೆ.

ಕನ್ಯಾಕುಮಾರಿಯಲ್ಲಿ, ಪಿಎಂ ಮೋದಿ ರಾಕ್ ಮೆಮೋರಿಯಲ್​ಗೆ ಭೇಟಿ ನೀಡಲಿದ್ದಾರೆ ಮತ್ತು ಮೇ 30 ರ ಸಂಜೆಯಿಂದ ಜೂನ್ 1 ರವರೆಗೆ ಧ್ಯಾನ ಮಂಟಪದಲ್ಲಿ ಸ್ವಾಮಿ ವಿವೇಕಾನಂದರು ಧ್ಯಾನ ಮಾಡಿದ ಸ್ಥಳದಲ್ಲಿಯೇ ಹಗಲು ರಾತ್ರಿ ಧ್ಯಾನ ಮಾಡಲಿದ್ದಾರೆ.

ಸ್ವಾಮಿ ವಿವೇಕಾನಂದ ರಾಕ್ ಮೆಮೋರಿಯಲ್ ಭಾರತದ ದಕ್ಷಿಣ ತುದಿಯಾದ ಕನ್ಯಾಕುಮಾರಿಯ ಸಮುದ್ರದ ಮಧ್ಯದಲ್ಲಿದೆ. ಇದರು ತಮಿಳು ಸಂತ ತಿರುವಳ್ಳುವರ್ ಅವರ ಏಕಶಿಲಾ ಪ್ರತಿಮೆಗೆ ಹತ್ತಿರದಲ್ಲಿದೆ. ಮೂರನೇ ಅವಧಿಗೆ ಪ್ರಧಾನಿಯಾಗುವ ಕನಸು ಹೊಂದಿರುವ ನರೇಂದ್ರ ಮೋದಿ ಗುರುವಾರ ಸಂಜೆ ಕನ್ಯಾಕುಮಾರಿಗೆ ಭೇಟಿ ನೀಡಿದ್ದಾರೆ. ಬಳಿಕ ಜೂನ್ 1 ರಂದು ದೆಹಲಿಗೆ ತೆರಳುವ ಸಾಧ್ಯತೆ ಇದೆ.

ಇದನ್ನೂ ಓದಿ: T20 World Cup 2024: 2ನೇ ಬ್ಯಾಚ್​ನಲ್ಲಿ ನ್ಯೂಯಾರ್ಕ್​ಗೆ ತೆರಳಿದ ಭಾರತದ ಮೂವರು ಆಟಗಾರರು

ಏಳು ಹಂತಗಳಲ್ಲಿ ನಿಗದಿಯಾದ ಲೋಕಸಭಾ ಚುನಾವಣೆ ಜೂನ್ 1 ರಂದು ಕೊನೆಗೊಳ್ಳಲಿದೆ. ಜೂನ್ 4ರಂದು ಮತ ಎಣಿಕೆ ನಡೆಯಲಿದೆ. 2019 ರ ಲೋಕಸಭಾ ಚುನಾವಣೆಯ ಫಲಿತಾಂಶಕ್ಕೆ ಮುಂಚಿತವಾಗಿ ಪ್ರಧಾನಿ ಮೋದಿ ಕೇಸರಿ ಬಟ್ಟೆ ಧರಿಸಿ ಕೇದಾರನಾಥ ಬಳಿಯ ಪವಿತ್ರ ಗುಹೆಯಲ್ಲಿ ಧ್ಯಾನ ಮಾಡಿದ್ದರು. ಈ ಫೋಟೊ ದೊಡ್ಡ ಮಟ್ಟದ ಜನಪ್ರಿಯತೆ ಗಳಿಸಿತ್ತು.

ಈ ತಿಂಗಳ ಆರಂಭದಲ್ಲಿ, ಪ್ರಧಾಣಿ ಮೋದಿ ಅವರು ನೀಡಿದ ವಿಶೇಷ ಸಂದರ್ಶನದಲ್ಲಿ, ಚುನಾವಣಾ ಲೆಕ್ಕಾಚಾರಗಳು ನಮ್ಮ ಪರವಾಗಿ ಹೆಚ್ಚು ವಾಲುತ್ತಿವೆ. ನಾನು ಅದರ ಬಗ್ಗೆ ಏನನ್ನೂ ಹೇಳಬೇಕಾಗಿಲ್ಲ. ನಾವು ಮೇಲುಗೈ ಸಾಧಿಸಿದ್ದೇವೆ. ಮತ್ತು ಅದು ಎಲ್ಲರಿಗೂ ತಿಳಿದಿದೆ ಎಂದು ಹೇಳಿದ್ದರು. ಚುನಾವಣಾ ಸೋಲುಗಳು ಮತ್ತು ಹಲವರ ಪಕ್ಷಾಂತರಗಳಿಂದ ಕಂಗೆಟ್ಟಿರುವ ಕಾಂಗ್ರೆಸ್, ಬಿಜೆಪಿಯನ್ನು ಎದುರಿಸುವ ಶಕ್ತಿ ಕಳೆದುಕೊಂಡಿದೆ ಎಂದು ಹೇಳಿದ್ದರು.

ತಮ್ಮ ಹೊಸ ಸರ್ಕಾರದ ಮೊದಲ 100 ದಿನಗಳ ಕ್ರಿಯಾ ಯೋಜನೆಯನ್ನು ರೂಪಿಸಲು ತಮ್ಮ ಸಚಿವರಿಗೆ ನಿಯೋಜಿಸಿದ್ದೇನೆ ಎಂದು ಪ್ರಧಾನಿ ಹೇಳಿದ್ದರು.

Continue Reading

ದೇಶ

Narendra Modi: ರಾಹುಲ್‌ ಗಾಂಧಿ, ಕೇಜ್ರಿವಾಲ್‌ಗೆ ಪಾಕ್‌ ಬೆಂಬಲ; ತನಿಖೆಯಾಗಲಿ ಎಂದ ಮೋದಿ

Narendra Modi: ಅರವಿಂದ ಕೇಜ್ರಿವಾಲ್‌ ಹಾಗೂ ರಾಹುಲ್‌ ಗಾಂಧಿ ಅವರಿಗೆ ಪಾಕಿಸ್ತಾನದ ನಾಯಕರು ಬಾಹ್ಯ ಬೆಂಬಲ ನೀಡುತ್ತಿರುವ ಕುರಿತು ತನಿಖೆಯಾಗಬೇಕಿದೆ ಎಂಬುದಾಗಿ ಪ್ರಧಾನಿ ನರೇಂದ್ರ ಮೋದಿ ಸಂದರ್ಶನವೊಂದರಲ್ಲಿ ಹೇಳಿದ್ದಾರೆ. ಇತ್ತೀಚೆಗೆ, ಪಾಕಿಸ್ತಾನದ ಕೆಲ ನಾಯಕರು ಇಬ್ಬರ ಪರವಾಗಿ ಪೋಸ್ಟ್‌ ಮಾಡಿದ್ದರು. ಹಾಗಾಗಿ, ಮೋದಿ ಅವರು ವಾಗ್ದಾಳಿ ನಡೆಸಿದ್ದಾರೆ.

VISTARANEWS.COM


on

Narendra Modi
Koo

ನವದೆಹಲಿ: ಲೋಕಸಭೆ ಚುನಾವಣೆ (Lok Sabha Election 2024) ಕೊನೆಯ ಹಂತಕ್ಕೆ ಬಂದರೂ ರಾಜಕೀಯ ನಾಯಕರ ಅಬ್ಬರದ ಹೇಳಿಕೆ, ಟೀಕೆ, ವ್ಯಂಗ್ಯ, ವಾಗ್ವಾದಗಳು ನಿಲ್ಲುತ್ತಿಲ್ಲ. ಇದಕ್ಕೆ ನಿದರ್ಶನ ಎಂಬಂತೆ, ಕಾಂಗ್ರೆಸ್‌ ನಾಯಕ ರಾಹುಲ್‌ ಗಾಂಧಿ (Rahul Gandhi) ಹಾಗೂ ದೆಹಲಿ ಸಿಎಂ ಅರವಿಂದ ಕೇಜ್ರಿವಾಲ್‌ (Arvind Kejriwal) ಅವರ ವಿರುದ್ಧ ಪ್ರಧಾನಿ ನರೇಂದ್ರ ಮೋದಿ (Narendra Modi) ವಾಗ್ದಾಳಿ ನಡೆಸಿದ್ದಾರೆ. “ಅರವಿಂದ ಕೇಜ್ರಿವಾಲ್‌ ಹಾಗೂ ರಾಹುಲ್‌ ಗಾಂಧಿ ಅವರಿಗೆ ಪಾಕಿಸ್ತಾನದ ನಾಯಕರು ಬೆಂಬಲ ನೀಡುತ್ತಿರುವ ಕುರಿತು ತನಿಖೆಯಾಗಬೇಕಿದೆ” ಎಂಬುದಾಗಿ ಪ್ರಧಾನಿ ಹೇಳಿದ್ದಾರೆ.

ಐಎಎನ್‌ಎಸ್‌ ಸುದ್ದಿಸಂಸ್ಥೆಗೆ ಸಂದರ್ಶನ ನೀಡುವ ವೇಳೆ ಮೋದಿ ಅವರು ಈ ವಿಷಯ ಪ್ರಸ್ತಾಪಿಸಿದ್ದಾರೆ. ಪಾಕಿಸ್ತಾನದ ನಾಯಕರ ಬೆಂಬಲದ ಕುರಿತು ಕೇಳಿದ ಪ್ರಶ್ನೆಗೆ ಉತ್ತರಿಸಿದ ಮೋದಿ, “ನಾನು ಪ್ರಧಾನಿ ಸ್ಥಾನ ಹೊಂದಿದ್ದು, ಅಂತಹ ವಿಷಯಗಳ ಬಗ್ಗೆ ಮಾತನಾಡಬಾರದು. ಆದರೆ, ನಿಮ್ಮ ಕಾಳಜಿ ನನಗೆ ಅರ್ಥವಾಗುತ್ತದೆ. ಕೆಲವರು ನಮ್ಮ ವಿರುದ್ಧ ದ್ವೇಷ ಕಾರುತ್ತಾರೆ. ಆ ದ್ವೇಷ ಕಾರುವವರೇ ನಮ್ಮ ನಾಯಕರಿಗೆ ಬೆಂಬಲ ಸೂಚಿಸುತ್ತಾರೆ. ಆಯ್ಕೆಯ ಆಧಾರದ ಮೇಲೆಯೇ ದ್ವೇಷ ಕಾರುವವರು ಬೆಂಬಲ ನೀಡುತ್ತಾರೆ. ಈ ಕುರಿತು ತನಿಖೆಯಾಗಬೇಕಿದೆ” ಎಂಬುದಾಗಿ ನರೇಂದ್ರ ಮೋದಿ ಹೇಳಿದರು.

ಏನಿದು ಪ್ರಕರಣ?

ಮೇ ತಿಂಗಳ ಆರಂಭದಲ್ಲಿ ಪಾಕಿಸ್ತಾನದ ಮಾಜಿ ಸಚಿವ ಚೌಧರಿ ಫವಾದ್‌ ಅವರು ರಾಹುಲ್‌ ಗಾಂಧಿ ಅವರ ಪೋಸ್ಟ್‌ಅನ್ನು ಹಂಚಿಕೊಂಡು, ಅವರ ಕುರಿತು ಮೆಚ್ಚುಗೆಯ ಮಾತುಗಳನ್ನಾಡಿದ್ದರು. ದೆಹಲಿ ಅಬಕಾರಿ ನೀತಿ ಪ್ರಕರಣದಲ್ಲಿ ಅರವಿಂದ್‌ ಕೇಜ್ರಿವಾಲ್‌ ಅವರಿಗೆ ಜಾಮೀನು ಸಿಕ್ಕಾಗಲೂ ಚೌಧರಿ ಫವಾದ್‌ ಪ್ರತಿಕ್ರಿಯಿಸಿದ್ದರು. ಆಗ ಅವರು, “ಅರವಿಂದ್‌ ಕೇಜ್ರಿವಾಲ್‌ ಬಿಡುಗಡೆಯಾಗಿದ್ದಾರೆ. ಇದರಿಂದ ಮೋದಿ ಮತ್ತೊಂದು ಯುದ್ಧ ಸೋತಂತಾಗಿದೆ. ಇದು ಭಾರತಕ್ಕೆ ಶುಭ ಸುದ್ದಿ” ಎಂದಿದ್ದರು. ಚುನಾವಣೆ ವೇಳೆಯೂ, “ದ್ವೇಷ ಹಾಗೂ ತೀವ್ರವಾದದ ವಿರುದ್ಧ ಶಾಂತಿ ಹಾಗೂ ಸಾಮರಸ್ಯ ಗೆಲ್ಲುತ್ತದೆ ಎಂಬ ವಿಶ್ವಾಸವಿದೆ” ಎಂದು ಚೌಧರಿಯು ಕೇಜ್ರಿವಾಲ್‌ ಅವರ ಪೋಸ್ಟ್‌ಗೆ ಪ್ರತಿಕ್ರಿಯಿಸಿದ್ದರು.

ಮಣಿಶಂಕರ್‌ ಅಯ್ಯರ್‌ಗೆ ಟಾಂಗ್‌ ಕೊಟ್ಟಿದ್ದ ಮೋದಿ

ಕೆಲ ದಿನಗಳ ಹಿಂದೆ ಇಂಡಿಯಾ ಟಿವಿ ಚಾನೆಲ್‌ ಜತೆ ಸಂವಾದ ನಡೆಸುವ ವೇಳೆ, ಮಣಿಶಂಕರ್‌ ಅಯ್ಯರ್‌ ಹೇಳಿಕೆ ಕುರಿತು ಸಂದರ್ಶಕ ಕೇಳಿದ ಪ್ರಶ್ನೆಗೆ ನರೇಂದ್ರ ಮೋದಿ ಅವರು ಮಾರ್ಮಿಕವಾಗಿ ಉತ್ತರ ನೀಡಿದರು. “ನಾನೇ ಲಾಹೋರ್‌ಗೆ ತೆರಳಿ ಆ ಪಾಕಿಸ್ತಾನದ ಶಕ್ತಿ ಎಷ್ಟಿದೆ ಎಂಬುದನ್ನು ನೋಡಿಕೊಂಡು ಬಂದಿದ್ದೇನೆ. ನನ್ನನ್ನು ನೋಡಿ, ಪಾಕಿಸ್ತಾನದ ಒಬ್ಬ ಪತ್ರಕರ್ತ ಆಶ್ಚರ್ಯದಿಂದ ಕೇಳಿದ. ‘ವೀಸಾ ಇಲ್ಲದೆ ನೀವೇಗೆ ಇಲ್ಲಿಗೆ ಬಂದಿದ್ದೀರಿ’ ಎಂದ. ಅದಕ್ಕೆ ನಾನು, ‘ಪಾಕಿಸ್ತಾನ ಒಂದು ಕಾಲಕ್ಕೆ ನಮ್ಮದೇ ದೇಶದ ಭಾಗವಾಗಿತ್ತು’ ಎಂಬುದಾಗಿ ಉತ್ತರಿಸಿದೆ” ಎಂಬುದಾಗಿ ನರೇಂದ್ರ ಮೋದಿ ಹೇಳಿದ್ದಾರೆ. ಆ ಮೂಲಕ ಮಣಿಶಂಕರ್‌ ಅಯ್ಯರ್‌ ಹೇಳಿಕೆಗೆ ವ್ಯಂಗ್ಯವಾಗಿಯೇ ಉತ್ತರ ಕೊಟ್ಟಿದ್ದರು.

ಇದನ್ನೂ ಓದಿ: Varanasi: ಮೋದಿ ಕುರಿತು ವಾರಾಣಸಿಯಲ್ಲಿರುವ ಕನ್ನಡಿಗರು ಏನಂತಾರೆ? ಇಲ್ಲಿದೆ ‘ವಿಸ್ತಾರ ನ್ಯೂಸ್’ ಗ್ರೌಂಡ್‌ ರಿಪೋರ್ಟ್!

Continue Reading
Advertisement
Prajwal Revanna Case
ಪ್ರಮುಖ ಸುದ್ದಿ3 hours ago

Prajwal Revanna Case : ಜರ್ಮನಿಯಿಂದ ಭಾರತಕ್ಕೆ ಬರಲು ವಿಮಾನ ಟಿಕೆಟ್ ಬುಕ್ ಮಾಡಿದ ಪ್ರಜ್ವಲ್ ರೇವಣ್ಣ

chakravarthy sulibele
ಕರ್ನಾಟಕ4 hours ago

Chakravarthy Sulibele : ಮಂಡಿಯೂರಿ ಭೈರಪ್ಪ ಅವರಿಂದ ಸಾವರ್ಕರ್ ಪ್ರಶಸ್ತಿ ಸ್ವೀಕರಿಸಿದ ಚಕ್ರವರ್ತಿ ಸೂಲಿಬೆಲೆ

Cyber Crime
ಪ್ರಮುಖ ಸುದ್ದಿ4 hours ago

Cyber Crime : ಹೆಣ್ಣು ಮಕ್ಕಳ ಫೋಟೋ ಅಶ್ಲೀಲಗೊಳಿಸಿ ಪೋಸ್ಟ್​ ಮಾಡುತ್ತಿದ್ದವನ ಬಂಧನ

Bomb Threat
ಪ್ರಮುಖ ಸುದ್ದಿ4 hours ago

Bomb Threat : ತೆಲಂಗಾಣ ಡಿಸಿಎಂ ಮನೆಗೆ ಬಾಂಬ್​ ಬೆದರಿಕೆ; ಆತಂಕ

Acid attack
ಕರ್ನಾಟಕ5 hours ago

Acid attack: ಮನೆ ಬಾಗಿಲು ತೆರೆಯದ ಹಿನ್ನೆಲೆ ವಿವಾಹಿತ ಪ್ರಿಯತಮೆಗೆ ಆ್ಯಸಿಡ್ ಎರಚಿದ ಪ್ರಿಯಕರ!

Cab service
ಪ್ರಮುಖ ಸುದ್ದಿ5 hours ago

Cab Service : ಆ್ಯಪ್​ ಆಧಾರಿತ ಕ್ಯಾಬ್​ಗಳು ಶೇ. 5ಕ್ಕಿಂತ ಹೆಚ್ಚು ಸೇವಾ ಶುಲ್ಕ ವಿಧಿಸುವಂತಿಲ್ಲ; ಸರ್ಕಾರದ ಆದೇಶಕ್ಕೆ ಕೋರ್ಟ್​ ಮನ್ನಣೆ

Gauri Khan
ಸಿನಿಮಾ5 hours ago

Gauri Khan: ಇಸ್ಲಾಂಗೆ ಮತಾಂತರ ಆಗದೇ ಇರಲು ಕಾರಣ ತಿಳಿಸಿದ ಶಾರುಖ್ ಖಾನ್ ಪತ್ನಿ ಗೌರಿ!

Veer Savarkar flyover
ಕರ್ನಾಟಕ5 hours ago

Veer Savarkar flyover: ಸಾವರ್ಕರ್ ಸೇತುವೆಯ ನಾಮಫಲಕಕ್ಕೆ ಮಸಿ ಬಳಿದಿರೋದು ಅತ್ಯಂತ ಖಂಡನೀಯ: ವಿಜಯೇಂದ್ರ

Lok Sabha Election
ಪ್ರಮುಖ ಸುದ್ದಿ5 hours ago

Lok Sabha Election : ಷೇರು ಮಾರುಕಟ್ಟೆ ಸಂಸ್ಥೆಯ ಪ್ರಕಾರ ಬಿಜೆಪಿ ಕಳೆದ ಬಾರಿಗಿಂತ ಹೆಚ್ಚು ಸೀಟು ಗೆಲ್ಲಲಿದೆ; ಲೆಕ್ಕಾಚಾರ ಹೀಗಿದೆ

Robbery Case Two accused arrested by yallapur police
ಕರ್ನಾಟಕ5 hours ago

Robbery Case: ಅರಬೈಲ್ ಘಟ್ಟದಲ್ಲಿ ಕಾರು ಅಡ್ಡಗಟ್ಟಿ ದರೋಡೆ; ಇಬ್ಬರು ಆರೋಪಿಗಳ ಬಂಧನ

Sharmitha Gowda in bikini
ಕಿರುತೆರೆ8 months ago

Geetha Serial Kannada: ನಿದ್ದೆ ಕದ್ದ ಚೋರಿ! ನಟಿ `ಭಾನುಮತಿ’ ಹಾಟ್‌ ಪೋಟೊಗಳಿಗೆ ಫ್ಯಾನ್ಸ್ ಫುಲ್ ಫಿದಾ

Kannada Serials
ಕಿರುತೆರೆ8 months ago

Kannada Serials TRP: 2ನೇ ಸ್ಥಾನದಲ್ಲಿ 2 ಧಾರಾವಾಹಿಗಳು; ಟಿಆರ್‌ಪಿ ರೇಸ್‌ನಲ್ಲಿಲ್ಲ ಭಾಗ್ಯಲಕ್ಷ್ಮೀ!

Bigg Boss- Saregamapa 20 average TRP
ಕಿರುತೆರೆ7 months ago

Kannada Serials TRP: ಏಳನೇ ಸ್ಥಾನಕ್ಕೆ ʻಅಮೃತಧಾರೆʼ ಕುಸಿತ; ಬಿಗ್‌ ಬಾಸ್‌-ಸರಿಗಮಪ ಟಿಆರ್‌ಪಿ ಎಷ್ಟು?

galipata neetu
ಕಿರುತೆರೆ6 months ago

Kanyadana Serial: ಕಿರುತೆರೆಗೆ ಮತ್ತೆ ಎಂಟ್ರಿ ಕೊಟ್ಟ ʻಗಾಳಿಪಟʼ ಖ್ಯಾತಿಯ ʻನೀತುʼ!

Kannada Serials
ಕಿರುತೆರೆ8 months ago

Kannada Serials TRP: ನಾಲ್ಕನೇ ಸ್ಥಾನಕ್ಕೆ ಕುಸಿತ ಕಂಡ ʻಸೀತಾ ರಾಮʼ; ಟಿಆರ್‌ಪಿ ರೇಸ್‌ಗೆ ʻಭಾಗ್ಯಲಕ್ಷ್ಮಿʼ ಬ್ಯಾಕ್‌!

Kannada Serials
ಕಿರುತೆರೆ8 months ago

Kannada Serials TRP: ಟಿಆರ್‌ಪಿಯಲ್ಲಿ ʻಭಾಗ್ಯಲಕ್ಷ್ಮೀʼ ಹವಾ; ʻಪುಟ್ಟಕ್ಕನ ಮಕ್ಕಳುʼ ಧಾರಾವಾಹಿಗೆ ಸಂಕಷ್ಟ!

Bigg Boss' dominates TRP; Sita Rama fell to the sixth position
ಕಿರುತೆರೆ7 months ago

Kannada Serials TRP: ಟಿಆರ್‌ಪಿಯಲ್ಲಿ ʻಬಿಗ್ ಬಾಸ್ʼದೇ ಮೇಲುಗೈ; 6ನೇ ಸ್ಥಾನಕ್ಕೆ ಕುಸಿದ ʻಸೀತಾ ರಾಮʼ

geetha serial Dhanush gowda engagement
ಕಿರುತೆರೆ5 months ago

Dhanush Gowda: ಗೀತಾ ಧಾರಾವಾಹಿ ನಟನ ನಿಶ್ಚಿತಾರ್ಥ; ಭವ್ಯಾಳ ಕಮೆಂಟ್‌ ಬಾಕ್ಸ್‌ ಆಫ್‌!

varun
ಕಿರುತೆರೆ6 months ago

Brindavana Serial: ʼಬೃಂದಾವನʼ ಧಾರಾವಾಹಿಯಲ್ಲಿ ದೊಡ್ಡ ಟ್ವಿಸ್ಟ್‌; ಪ್ರಮುಖ ಪಾತ್ರಧಾರಿಯೇ ಬದಲು

Kannada Serials
ಕಿರುತೆರೆ9 months ago

Kannada Serials TRP: ಟಿಆರ್‌ಪಿಯಲ್ಲಿ ಏರಿಕೆ ಕಂಡ ʻಅಮೃತಧಾರೆʼ; ʻಗಟ್ಟಿಮೇಳʼಕ್ಕೆ ನಾಲ್ಕನೇ ಸ್ಥಾನ!

Karnataka weather Forecast
ಮಳೆ7 hours ago

Karnataka Weather : ಚಿಕ್ಕಮಗಳೂರಲ್ಲಿ ಭಾರಿ ಮಳೆ; ಯಾದಗಿರಿಯಲ್ಲಿ ಕರೆಂಟ್‌ ಕಟ್‌, ಜನರೇಟರ್‌ನಿಂದ ಮೊಬೈಲ್‌ಗಳಿಗೆ ಚಾರ್ಜಿಂಗ್‌!

tumkur murder
ತುಮಕೂರು15 hours ago

Tumkur Murder : ಮಗುವಿನ ಮುಂದೆಯೇ ಹೆಂಡತಿಯ ಕತ್ತು, ದೇಹವನ್ನು ಕತ್ತರಿಸಿ ಬಿಸಾಡಿದ ದುಷ್ಟ

Karnataka Weather Forecast
ಮಳೆ1 day ago

Karnataka Weather : ಕಡಲತೀರದಲ್ಲಿ ಅಲೆಗಳ ಅಬ್ಬರ, ಪ್ರವಾಸಿಗರಿಗೆ ಕಟ್ಟೆಚ್ಚರ; ನಾಳೆಯೂ ಗಾಳಿ ಸಹಿತ ಮಳೆ ಅಬ್ಬರ

Karnataka Rain
ಮಳೆ2 days ago

Karnataka Rain : ಯಾದಗಿರಿಯಲ್ಲಿ ಬಿರುಗಾಳಿ ಸಹಿತ ಮಳೆ; ಸಿಡಿಲು ಬಡಿದು ಎಮ್ಮೆಗಳು ಸಾವು

Basavanagudi News
ಬೆಂಗಳೂರು2 days ago

Basavanagudi News : ಪೂಜಾ ಸಾಮಗ್ರಿಗೆ ಒನ್‌ ಟು ಡಬಲ್‌ ರೇಟ್‌; ದೊಡ್ಡ ಗಣಪತಿ ದೇಗುಲದಲ್ಲಿ ಕೈ ಕೈ ಮಿಲಾಯಿಸಿದ ಭಕ್ತರು-ವ್ಯಾಪಾರಿಗಳು

Karnataka Rain
ಮಳೆ3 days ago

Karnataka Rain : ಭಾರಿ ಮಳೆಗೆ ರಸ್ತೆ ಕಾಣದೆ ರಾಜಕಾಲುವೆಗೆ ಉರುಳಿದ ಆಟೋ; ಚಾಲಕ ಸ್ಥಳದಲ್ಲೇ ಸಾವು

dina bhavishya read your daily horoscope predictions for May 23 2024
ಭವಿಷ್ಯ6 days ago

Dina Bhavishya : 12 ರಾಶಿಯವರ ಇಂದಿನ ಭವಿಷ್ಯ ಹೇಗಿದೆ? ಯಾರಿಗೆ ಶುಭ, ಯಾರಿಗೆ ಅಶುಭ ಫಲ?

Karnataka Weather Forecast
ಮಳೆ7 days ago

Karnataka Weather : ಮುಂದುವರಿಯಲಿದೆ ವರುಣಾರ್ಭಟ; ಬೆಂಗಳೂರಲ್ಲೂ ಭಾರಿ ಮಳೆ ನಿರೀಕ್ಷೆ!

Karnataka Rain
ಮಳೆ1 week ago

Karnataka Rain : ಭಾರಿ ಮಳೆಗೆ ಕರೆಂಟ್‌ ಕಟ್‌, ಕತ್ತಲಲ್ಲೇ ರೋಗಿಗಳಿಗೆ ಟ್ರೀಟ್‌ಮೆಂಟ್‌; ಮರ ಬಿದ್ದರೂ ಪಾರಾದ ತಾಯಿ-ಮಗ

Love Case Father throws hot water on man who loved his daughter for coming home
ಕೊಡಗು1 week ago

Love Case : ಮನೆಗೆ ಬಂದ ಪ್ರೇಮಿಗೆ ಕೊತ ಕೊತ ಕುದಿಯುವ ನೀರು ಎರಚಿದ ಯುವತಿ ತಂದೆ!

ಟ್ರೆಂಡಿಂಗ್‌