Vistara news polling booth: ಚಿಕ್ಕಬಳ್ಳಾಪುರ ಲೋಕಸಭೆಯಲ್ಲಿ ಬಿಜೆಪಿಗೆ ಜೈ ಎಂದ ಮತದಾರ; 2ನೇ ಸ್ಥಾನದಲ್ಲಿ ಕಾಂಗ್ರೆಸ್‌! - Vistara News

ಚಿಕ್ಕಬಳ್ಳಾಪುರ

Vistara news polling booth: ಚಿಕ್ಕಬಳ್ಳಾಪುರ ಲೋಕಸಭೆಯಲ್ಲಿ ಬಿಜೆಪಿಗೆ ಜೈ ಎಂದ ಮತದಾರ; 2ನೇ ಸ್ಥಾನದಲ್ಲಿ ಕಾಂಗ್ರೆಸ್‌!

Vistara news polling booth: ವಿಸ್ತಾರ ಪೋಲಿಂಗ್‌ ಬೂತ್‌ನಲ್ಲಿ ನಡೆಸಿದ ಜನಾಭಿಪ್ರಾಯ ಸಂಗ್ರಹದ ಅನುಸಾರ ಚಿಕ್ಕಬಳ್ಳಾಪುರದಲ್ಲಿ ಬಿಜೆಪಿ – ಕಾಂಗ್ರೆಸ್ ನಡುವೆ ಬಿಗ್ ಫೈಟ್‌ ಏರ್ಪಟ್ಟಿದೆ. ಚಿಕ್ಕಬಳ್ಳಾಪುರದಲ್ಲಿ ಬಿಜೆಪಿಗೆ 3468 ವೋಟ್ ನೀಡಿದ ಮತದಾರರು, ಕಾಂಗ್ರೆಸ್‌ಗೆ 2662 ಮತಗಳನ್ನು ಚಲಾಯಿಸಿದ್ದಾರೆ. ಹೀಗಾಗಿ ಬಿಜೆಪಿ ಮೊದಲ ಸ್ಥಾನದಲ್ಲಿದ್ದರೆ ಕಾಂಗ್ರೆಸ್‌ ಎರಡನೇ ಸ್ಥಾನದಲ್ಲಿದ್ದಾರೆ.

VISTARANEWS.COM


on

Vistara News polling booth Voter hails BJP in Kolar Lok Sabha constituency Congress is in second place
ಮಹತ್ವದ, ಕುತೂಹಲಕರ ಸುದ್ದಿಗಾಗಿ ಫಾಲೊ ಮಾಡಿ
Koo

ಬೆಂಗಳೂರು: ಲೋಕಸಭಾ ಚುನಾವಣೆ (Lok Sabha Election 2024) ಹಿನ್ನೆಲೆಯಲ್ಲಿ ವಿಸ್ತಾರ ನ್ಯೂಸ್‌ (Vistara News) ಶುಕ್ರವಾರ (ಮಾ. 15) ಕೋಲಾರ ಲೋಕಸಭಾ ಕ್ಷೇತ್ರಕ್ಕೆ ಸಂಬಂಧಪಟ್ಟಂತೆ ನಡೆಸಿದ ಪೋಲಿಂಗ್‌ ಬೂತ್‌ನಲ್ಲಿ (Vistara news polling booth) ಬಿಜೆಪಿಯನ್ನು (BJP Karnataka) ನಾಗರಿಕರು ಬೆಂಬಲಿಸಿದ್ದಾರೆ. ಸಾವಿರಾರು ಕರೆಗಳು ಬಂದಿದ್ದು, ಅವುಗಳಲ್ಲಿ ಒಟ್ಟು 6192 ಕರೆಗಳನ್ನು ಸ್ವೀಕಾರ ಮಾಡಲಾಗಿದೆ. ಇದರಲ್ಲಿ ಶೇ. 56ರಷ್ಟು ಮಂದಿ ಬಿಜೆಪಿಯನ್ನು ಬೆಂಬಲಿಸಿದ್ದರೆ, ಶೇಕಡಾ 43ರಷ್ಟು ಮಂದಿ ಕಾಂಗ್ರೆಸ್‌ (Congress Karnataka) ಪಕ್ಷವನ್ನು ಬೆಂಬಲಿಸಿದ್ದಾರೆ.

ವಿಸ್ತಾರ ಪೋಲಿಂಗ್‌ ಬೂತ್‌ನಲ್ಲಿ ನಡೆಸಿದ ಜನಾಭಿಪ್ರಾಯ ಸಂಗ್ರಹದ ಅನುಸಾರ ಚಿಕ್ಕಬಳ್ಳಾಪುರದಲ್ಲಿ ಬಿಜೆಪಿ – ಕಾಂಗ್ರೆಸ್ ನಡುವೆ ಬಿಗ್ ಫೈಟ್‌ ಏರ್ಪಟ್ಟಿದೆ. ಚಿಕ್ಕಬಳ್ಳಾಪುರದಲ್ಲಿ ಬಿಜೆಪಿಗೆ 3468 ವೋಟ್ ನೀಡಿದ ಮತದಾರರು
ಕಾಂಗ್ರೆಸ್‌ಗೆ 2662 ಮತಗಳನ್ನು ಚಲಾಯಿಸಿದ್ದಾರೆ. ಈ ವೇಳೆ ಇತರರಿಗೆ 62 ಮತಗಳು ಬಿದ್ದಿವೆ. ಹೀಗಾಗಿ ಚಿಕ್ಕಬಳ್ಳಾಪುರದಲ್ಲಿ ಬಿಜೆಪಿ – ಜೆಡಿಎಸ್‌ ಮೈತ್ರಿಗೆ ಮತದಾರರು ಜೈ ಎಂದಿದ್ದಾರೆ.

ಕರೆಗಳ ಶೇಕಡಾವಾರು ವಿವರ

  • ಸ್ವೀಕರಿಸಿದ ಕರೆಗಳು – 6192
  • ಬಿಜೆಪಿ -3468 (56%)
  • ಕಾಂಗ್ರೆಸ್ – 2662 – (43%)
  • ಇತರೆ – 62 (1%)

ಇದರ ಅನುಸಾರ ಬಿಜೆಪಿ ಅಭ್ಯರ್ಥಿಯ ಪರ ಹೆಚ್ಚಿನ ಜನರು ಒಲುವು ತೋರಿದ್ದಾರೆ. ಅಲ್ಲದೆ, ಹಾಲಿ ಸಂಸದರಾಗಿ ಬಿ.ಎನ್.‌ ಬಚ್ಚೇಗೌಡ ಅವರು ಚಿಕ್ಕಬಳ್ಳಾಪುರದಿಂದ ರಾಜಕೀಯ ನಿವೃತ್ತಿಯನ್ನು ಪಡೆದುಕೊಂಡಿದ್ದರು. ಈ ಹಿನ್ನೆಲೆಯಲ್ಲಿ ಇಲ್ಲೀಗ ಟಿಕೆಟ್‌ಗೆ ಫೈಟ್‌ ನಡೆಯುತ್ತಿದೆ. ಮಾಜಿ ಸಚಿವ ಡಾ. ಕೆ. ಸುಧಾಕರ್‌ ಹಾಗೂ ಅಲೋಕ್ ವಿಶ್ವನಾಥ್ ನಡುವೆ ಟಿಕೆಟ್‌ಗಾಗಿ ಪೈಪೋಟಿ ನಡೆದಿದೆ. ಆದರೆ, ಮತದಾರ ಮಾತ್ರ ಬಿಜೆಪಿಯ ಪರ ಒಲವು ತೋರಿರುವುದು ಗೊತ್ತಾಗುತ್ತದೆ.

ಏನಿದು ಪೋಲಿಂಗ್‌ ಬೂತ್‌?

ಬೆಂಗಳೂರಿನಲ್ಲಿರುವ ವಿಸ್ತಾರ ನ್ಯೂಸ್‌ ಮುಖ್ಯ ಕಚೇರಿಯಲ್ಲಿ ತೆರೆಯಲಾಗಿರುವ ಪೋಲಿಂಗ್‌ ಬೂತ್‌ಗೆ ಸಾರ್ವಜನಿಕರು ನಿಗದಿತ ಸಮಯದಲ್ಲಿ ಪೋನ್‌ ಮಾಡುವ ಮೂಲಕ ತಮ್ಮ ಲೋಕಸಭೆ ಕ್ಷೇತ್ರದ ಅಭ್ಯರ್ಥಿ ಯಾರಾಗಬೇಕು, ಯಾವ ಪಕ್ಷ ಈ ಬಾರಿ ಗೆಲ್ಲಬೇಕು ಎಂದು ತಿಳಿಸಬಹುದು.

ಇದನ್ನೂ ಓದಿ: Vistara news polling booth: ಕೋಲಾರದಲ್ಲಿ ಮೈತ್ರಿಗೆ ಮಹಾ ಬಲ; ಕಾಂಗ್ರೆಸ್‌ ಆಗಲಿದೆಯೇ ಸಬಲ?

ಪೋಲಿಂಗ್‌ ಬೂತ್‌ನಲ್ಲಿ ಮಾಹಿತಿ ಸಂಗ್ರಹ ಹೇಗೆ?

ವಿಸ್ತಾರ ನ್ಯೂಸ್‌ ಪೋಲಿಂಗ್‌ ಬೂತ್‌ಗೆ ಒಂದೇ ದೂರವಾಣಿ ಸಂಖ್ಯೆಯನ್ನು ನೀಡಲಾಗಿದೆ. ಆದರೆ, ಈ ಒಂದೇ ದೂರವಾಣಿ ಸಂಖ್ಯೆ ಸುಮಾರು 20ಕ್ಕೂ ಅಧಿಕ ಫೋನ್‌ಗಳಿಗೆ ಕನೆಕ್ಟ್‌ ಆಗುತ್ತದೆ. ಏಕಕಾಲದಲ್ಲಿ 20ಕ್ಕೂ ಅಧಿಕ ಮಂದಿ ಕರೆಯನ್ನು ಸ್ವೀಕರಿಸಿ ಮಾಹಿತಿಯನ್ನು ಸಂಗ್ರಹ ಮಾಡಲಾಗುತ್ತದೆ. ಯಾರು ಅಭ್ಯರ್ಥಿಯಾಗಬೇಕು? ಯಾರು ಗೆಲ್ಲಬೇಕು? ಯಾರಿಗೆ ಮತ ಎಂಬಿತ್ಯಾದಿ ಮಾಹಿತಿಗಳನ್ನು ಈ ವೇಳೆ ದಾಖಲಿಸಿಕೊಳ್ಳಲಾಗುತ್ತದೆ. ಬಳಿಕ ಅವುಗಳನ್ನು ಸಮೀಕರಿಸಿ ಫಲಿತಾಂಶವನ್ನು ಪ್ರಕಟಿಸಲಾಗುತ್ತದೆ.

ಈಗಾಗಲೇ ಮಂಡ್ಯ, ಬೆಳಗಾವಿ, ಬೆಂಗಳೂರು ಗ್ರಾಮಾಂತರ, ದಕ್ಷಿಣ ಕನ್ನಡ, ಬೆಂಗಳೂರು ಉತ್ತರ, ಬಳ್ಳಾರಿ ಮತ್ತು ಶಿವಮೊಗ್ಗ ಲೋಕಸಭಾ ಕ್ಷೇತ್ರಗಳ ಸಮೀಕ್ಷೆ ಮುಕ್ತಾಯಗೊಂಡಿವೆ.

ನೀವು ಕರೆ ಮಾಡಬೇಕಾದ ದೂರವಾಣಿ ಸಂಖ್ಯೆ: 080-69554488

ಕ್ಷಣ ಕ್ಷಣದ ಮಾಹಿತಿಗಾಗಿ Vistara News FaceBook ಪೇಜ್ ಫಾಲೋ ಮಾಡಿ
ಮಹತ್ವದ ಮಾಹಿತಿಗಾಗಿ ವಿಸ್ತಾರ ನ್ಯೂಸ್ ಆ್ಯಪ್ ಉಚಿತವಾಗಿ ಡೌನ್ ಲೋಡ್ ಮಾಡಿಕೊಳ್ಳಿ: Andriod App | IOS App
Continue Reading
Click to comment

Leave a Reply

Your email address will not be published. Required fields are marked *

ಮಳೆ

Rain Effect : ಬಿರುಗಾಳಿ ರಭಸಕ್ಕೆ ಮನೆಯ ಗೇಟ್ ಬಿದ್ದು ಬಾಲಕಿ ಸಾವು; ಸಿಡಿಲಿಗೆ ಎತ್ತುಗಳು ಬಲಿ

Rain Effect : ಭಾರಿ ಮಳೆ ಗಾಳಿಗೆ (Heavy Rain) ಅನಾಹುತಗಳು ಸಂಭವಿಸುತ್ತಿವೆ. ನೆಲಮಂಗಲದಲ್ಲಿ ರಭಸವಾಗಿ ಬೀಸಿದ ಬಿರುಗಾಳಿ ಮನೆಯ ಗೇಟ್‌ ಕಿತ್ತು ಬಂದು, ಅಲ್ಲೆ ಆಡವಾಡುತ್ತಿದ್ದ ಬಾಲಕಿ ಮೇಲೆ ಬಿದ್ದಿದೆ. ಪರಿಣಾಮ ಗಂಭೀರ ಗಾಯಗೊಂಡು ದಾರುಣವಾಗಿ ಮೃತಪಟ್ಟಿದ್ದಾಳೆ. ಸಿಡಿಲಿಗೆ ಎತ್ತುಗಳು ಬಲಿಯಾದರೆ, ಮರ ಬಿದ್ದರೂ ನಾಲ್ವರು ಕೂದಲೆಳೆ ಅಂತರದಲ್ಲಿ ಪಾರಾಗಿದ್ದಾರೆ.

VISTARANEWS.COM


on

By

Rain Effect In karnataka
ಮೃತ ಬಾಲಕಿ ಯಲ್ಲಮ್ಮ ಹಾಗೂ ಸಿಡಿಲಿಗೆ ಬಲಿಯಾದ ಎತ್ತುಗಳು
Koo

ನೆಲಮಂಗಲ: ಮಳೆ ಜತೆಗೆ ರಭಸವಾಗಿ ಬೀಸಿದ ಬಿರುಗಾಳಿಗೆ (Rain Effect) ಮನೆಯ ಗೇಟ್ ಕಿತ್ತು ಬಂದಿದ್ದು,ಇದೇ ವೇಳೆ ಮನೆಯ ಮುಂದೆ ಆಟವಾಡುತ್ತಿದ್ದ 7 ವರ್ಷದ ಬಾಲಕಿ ಮೇಲೆ ಗೇಟ್‌ ಬಿದ್ದಿದೆ. ಪರಿಣಾಮ ಬಾಲಕಿ ಯಲ್ಲಮ್ಮ (7) ಎಂಬಾಕೆ ಗಂಭೀರ ಗಾಯಗೊಂಡು ಸ್ಥಳದಲ್ಲೇ ಮೃತಪಟ್ಟಿದ್ದಾಳೆ. ಬೆಂಗಳೂರು ಗ್ರಾಮಾಂತರದ ನೆಲಮಂಗಲ ತಾಲೂಕಿನ ವಾಜರಹಳ್ಳಿಯಲ್ಲಿ ಘಟನೆ ನಡೆದಿದೆ.

ನಿನ್ನೆ ಗುರುವಾರ ಸಂಜೆ ಸುರಿದ ಬಿರುಗಾಳಿ ಸಹಿತ ಮಳೆಗೆ ಗೇಟ್ ಕಟ್ ಆಗಿ ಈ ದುರ್ಘಟನೆ ಸಂಭವಿಸಿದೆ. ರಾಯಚೂರು ಜಿಲ್ಲೆಯ ದೇವದುರ್ಗದ ಮೂಲದ ಮುಕ್ಕಣ್ಣ ಹಾಗೂ ಬಾಲಮ್ಮರ ದಂಪತಿ ಕೂಲಿ ಕೆಲಸ ಮಾಡಿಕೊಂಡು ಬೆಂಗಳೂರಲ್ಲಿ ಜೀವನ ನಡೆಸುತ್ತಿದ್ದರು. ಆದರೆ ಮಳೆಯು ಮುದ್ದು ಮಗಳನ್ನು ಕಸಿದುಕೊಂಡಿದೆ.

ನೆಲಮಂಗಲ ಟೌನ್ ಪೊಲೀಸ್ ಠಾಣಾ ವ್ಯಾಪ್ತಿಯಲ್ಲಿ ಘಟನೆ ನಡೆದಿದ್ದು, ಮೃತದೇಹವನ್ನು ಮರಣೋತ್ತರ ಪರೀಕ್ಷೆಗೆ ರವಾನಿಸಲಾಗಿದೆ. ಮೃತ ಕುಟುಂಬಸ್ಥರ ಆಕ್ರಂದನ ಮುಗಿಲು ಮುಟ್ಟಿದೆ.

ಬಳ್ಳಾರಿಯಲ್ಲಿ ಸಿಡಿಲು ಬಡಿದು ಎತ್ತುಗಳು ಸಾವು

ಗುರುವಾರ ಸಂಜೆ ಸಿಡಿಲು ಬಡಿದು ಎರಡು ಎತ್ತುಗಳು ಮೃತಪಟ್ಟಿವೆ. ಬಳ್ಳಾರಿ ತಾಲೂಕಿನ ಕಪ್ಪಗಲ್ಲು ಗ್ರಾಮದಲ್ಲಿ ಘಟನೆ ನಡೆದಿದೆ. ಗ್ರಾಮದಲ್ಲಿ ಸಂಜೆ ವೇಳೆ ಸಿಡಿಲು, ಗುಡುಗು ಸಹಿತ ಮಳೆ ಸುರಿದಿದೆ. ನಾಯಕರ ದೊಡ್ಡಬಸಪ್ಪ ಎಂಬುವವರಿಗೆ ಸೇರಿದ ಎತ್ತುಗಳು ಸಿಡಿಲಿಗೆ ಬಲಿಯಾಗಿವೆ. ತಲಾ ಒಂದು ಲಕ್ಷ ರೂ. ಮೌಲ್ಯದ ಎರಡು ಎತ್ತುಗಳು ಮೃತಪಟ್ಟಿದ್ದಕ್ಕೆ ರೈತ ಕಂಗಲಾಗಿದ್ದರು. ಪರಿಹಾರಕ್ಕೆ ಸರ್ಕಾರವನ್ನು ಒತ್ತಾಯಿಸಿದರು.

ಇದನ್ನೂ ಓದಿ: Dog Bite : ಆಟವಾಡುತ್ತಿದ್ದ ಮಕ್ಕಳ ಮೇಲೆ ಬೀದಿ ನಾಯಿಗಳು ಅಟ್ಯಾಕ್‌

ಸ್ವಲ್ಪ ಯಾಮಾರಿದರೂ ಹಾರಿಹೋಗುತ್ತಿತ್ತು ನಾಲ್ವರ ಪ್ರಾಣ ಪಕ್ಷಿ

ಬೆಂಗಳೂರಿನ ನಾಗರಭಾವಿಯ ಎನ್‌ಜಿಎಫ್‌ ಲೇಔಟ್‌ನಲ್ಲಿ ದೊಡ್ಡ ಅನಾಹುತವೊಂದು ಕೂದಲೆಳೆ ಅಂತರದಲ್ಲಿ ತಪ್ಪಿದೆ. ಸ್ವಲ್ಪ ಯಾಮಾರಿದರೂ ನಾಲ್ವರ ಪ್ರಾಣ ಪಕ್ಷಿ ಹಾರಿಹೋಗುತ್ತಿತ್ತು. ಶಿವು ಎಂಬುವವರು ರಾಯಚೂರಿನಿಂದ ಕೂಲಿ ಕೆಲಸಕ್ಕೆಂದು ಬೆಂಗಳೂರಿಗೆ ಬಂದಿದ್ದರು.

ಶೆಡ್‌ವೊಂದರಲ್ಲಿ ಶಿವು ದಂಪತಿ ಮತ್ತು ಇಬ್ಬರು ಮಕ್ಕಳು ವಾಸಿಸುತ್ತಿದ್ದರು. ನಿನ್ನೆ ಬುಧವಾರ ರಾತ್ರಿ ಸುರಿದ ಭಾರಿ ಮಳೆ ಗಾಳಿಗೆ ಬೃಹತ್‌ ಮರ ಹಾಗೂ ವಿದ್ಯುತ್‌ ಕಂಬ ಧರೆಗೆ ಉರುಳಿದ್ದವು. ವಿದ್ಯುತ್ ಕಂಬದ ಮೇಲೆ ಬೃಹತ್ ಮರ ಬಿದ್ದು, ಶೆಡ್‌ಗೆ ಉರುಳಿತ್ತು. ಅದೃಷ್ಟವಶಾತ್‌ ಆ ಸಮಯದಲ್ಲಿ ಶೆಡ್‌ನಲ್ಲಿ ಯಾರು ಇರಲಿಲ್ಲ. ಹೀಗಾಗಿ ಅನಾಹುತವೊಂದು ತಪ್ಪಿತ್ತು. ಮೊನ್ನೆ ಮರ ಬಿದ್ದ ಬಗ್ಗೆ ಬಿಬಿಎಂಪಿಗೆ ದೂರು ನೀಡಿದರೂ ಪಾಲಿಕೆ ಅಧಿಕಾರಿಗಳು ಕ್ಯಾರೆ ಎಂದಿಲ್ಲ. ಯಾವುದೇ ಕ್ರಮಕ್ಕೆ ಮುಂದಾಗದ ಅಧಿಕಾರಿಗಳ ನಡೆಗೆ ಸ್ಥಳೀಯರು ಆಕ್ರೋಶ ಹೊರಹಾಕಿದ್ದಾರೆ.

ಮನೆಗಳಿಗೆ ನುಗ್ಗಿದ ಚರಂಡಿ ಮಿಶ್ರಿತ ಮಳೆ ನೀರು

ರಾತ್ರಿ ಪೂರ್ತಿ ಸುರಿದ ಮಳೆಗೆ ಮನೆಗಳಿಗೆ ನೀರು ನುಗ್ಗಿದೆ. ಬೆಂಗಳೂರಿನ ಉಲ್ಲಾಳದಲ್ಲಿರುವ ಮನೆಗಳಿಗೆ ನೀರು ನುಗ್ಗಿತ್ತು. ಪರಿಣಾಮ ನಿವಾಸಿಗಳು ಜಾಗರಣೆ ಇದ್ದು, ರಾತ್ರಿಯಿಡೀ ನೀರು ತೆಗೆಯುವ ಕಾರ್ಯದಲ್ಲಿ ಮಗ್ನರಾಗಿದ್ದರು. ಇತ್ತ ಚಾಮರಾಜಪೇಟೆಯ ಜೆಜೆಆರ್ ನಗರದ ಮನೆಗಳಿಗೆ ಭಾರಿ ಮಳೆಗೆ ಕೊಳಚೆ ನೀರು ನುಗ್ಗಿತ್ತು ಈ ಹಿನ್ನೆಲೆಯಲ್ಲಿ ನಿವಾಸಿಗಳ ಆಕ್ರೋಶ ಹೊರಹಾಕಿದರು. ಮಳೆಗಾಲದಲ್ಲಿ ಬಿನ್ನಿ ಮಿಲ್ ಮುಖ್ಯ ರಸ್ತೆಯಲ್ಲಿರುವ ಸಲಾರ್ಪುರಿಯ ಅಪಾರ್ಟ್ಮೆಂಟ್‌ನಿಂದ ಕೊಳಚೆ ನೀರು ಮನೆಗಳಿಗೆ ನುಗ್ಗುತ್ತಿದೆ ಎಂದು ನಿವಾಸಿಗಳು ಆಕ್ರೋಶಿಸಿದರು. ನಿನ್ನೆ ಬುಧವಾರ ಸ್ಥಳೀಯರು ಅಪಾರ್ಟ್‌ಮೆಂಟ್ ಎದುರು ಪ್ರತಿಭಟನೆಯನ್ನೂ ನಡೆಸಿದ್ದರು.

ಏರ್‌ಪೋರ್ಟ್‌ಗೂ ನುಗ್ಗಿದ ನೀರು

ದೇವನಹಳ್ಳಿ ಸುತ್ತಮುತ್ತ ಕಳೆದ ರಾತ್ರಿ ಧಾರಾಕಾರ ಮಳೆಯಾಗಿದೆ. ದೇವನಹಳ್ಳಿ ಬಳಿಯ ಕೆಂಪೇಗೌಡ ಅಂತರಾಷ್ಟ್ರೀಯ ವಿಮಾನ ನಿಲ್ದಾಣದೊಳಗೆ ನೀರು ನುಗ್ಗಿತ್ತು. ಮೇಲ್ಚಾವಣಿಯಿಂದ ಟರ್ಮಿನಲ್ ಒಳಗಡೆಗೆ ನೀರು ಸೋರುತ್ತಿದ್ದು, ಲಗೇಜ್ ಬೇ ಬಳಿ ನೀರು ಬಂದ ಹಿನ್ನೆಲೆಯಲ್ಲಿ ಸಿಬ್ಬಂದಿ ಪರದಾಡಬೇಕಾಯಿತು. ಇನ್ನೂ ರನ್ ವೇ ಕ್ಲಿಯರೆನ್ಸ್ ಇಲ್ಲದ ಕಾರಣ 18ಕ್ಕೂ ಅಧಿಕ ವಿಮಾನಗಳು ಬೇರೆಡೆಗೆ ಡೈವರ್ಟ್ ಮಾಡಲಾಯಿತು.

ಉದ್ಘಾಟನೆಗೂ ಮುನ್ನವೇ ಮುಳುಗಿದ ಅಂಡರ್ ಪಾಸ್

ಮೈಸೂರು ರಸ್ತೆಯ ಆರ್‌ವಿ ಕಾಲೇಜ್ ಮುಂಭಾಗದ ಅಂಡರ್ ಪಾಸ್ ಉದ್ಘಾಟನೆಗೂ ಮುನ್ನವೇ ಮುಳುಗಿತ್ತು. ರೈಲ್ವೆ ಟ್ರ್ಯಾಕ್ ಕೆಳಗೆ ನೂತನವಾಗಿ ನಿರ್ಮಾಣ ಆಗಿರುವ ಅಂಡರ್ ಪಾಸ್‌ನಲ್ಲಿ ಮಳೆ ನೀರು ನಿಲ್ಲುವಂತಾಯಿತು.

ಈ ಸಂಗತಿಯ ಕುರಿತು ನಿಮ್ಮ ಅನಿಸಿಕೆ ಏನು? ಕಾಮೆಂಟ್ ಮೂಲಕ ತಿಳಿಸಿ

Continue Reading

ಕ್ರೈಂ

SSLC Result 2024: ಎಸ್‌ಎಸ್‌ಎಲ್‌ಸಿ ಫೇಲ್‌, ಸರಣಿ ಸಾವಿಗೆ ಮತ್ತೊಂದು ಸೇರ್ಪಡೆ

ಎಸ್ಎಸ್ಎಲ್‌ಸಿ ಪರೀಕ್ಷೆ ಫಲಿತಾಂಶ (SSLC Result 2024) ಬಂದ ಬಳಿಕ ಫೇಲ್ (SSLC fail) ಆದ ಕೆಲ ವಿದ್ಯಾರ್ಥಿಗಳು ಆತ್ಮಹತ್ಯೆ (Student self harming) ಮಾಡಿಕೊಳ್ಳುತ್ತಿರುವ ಸುದ್ದಿಗಳು ಆತಂಕ ಮೂಡಿಸುತ್ತಿವೆ. ನಿನ್ನೆಯಿಂದ ರಾಜ್ಯದಲ್ಲಿ ನಾಲ್ಕು ಪ್ರಕರಣಗಳು ವರದಿಯಾಗಿವೆ.

VISTARANEWS.COM


on

sslc result 2024 vaishnavi self harming
Koo

ಬೆಂಗಳೂರು: ಎಸ್ಎಸ್ಎಲ್‌ಸಿ ಪರೀಕ್ಷೆ ಫಲಿತಾಂಶ (SSLC Result 2024) ಬಂದ ಬಳಿಕ ಫೇಲ್ (SSLC fail) ಆದ ಕೆಲ ವಿದ್ಯಾರ್ಥಿಗಳು ಆತ್ಮಹತ್ಯೆ (Student self harming) ಮಾಡಿಕೊಳ್ಳುತ್ತಿರುವ ಸುದ್ದಿಗಳು ಆತಂಕ ಮೂಡಿಸುತ್ತಿವೆ. ಫೇಲ್‌ ಆದದ್ದರಿಂದ ನೊಂದುಕೊಂಡು ಮತ್ತೊಬ್ಬ ವಿದ್ಯಾರ್ಥಿನಿ ಆತ್ಮಹತ್ಯೆ ಮಾಡಿಕೊಂಡಿದ್ದಾಳೆ. ಚಿಕ್ಕಬಳ್ಳಾಪುರ (chikkaballapur news) ತಾಲ್ಲೂಕಿನ ಗಂಗರೇಕಾಲುವೆ ಗ್ರಾಮದ ಜಿ.ಎನ್ ವೈಷ್ಣವಿ (15) ಮೃತ ವಿದ್ಯಾರ್ಥಿನಿ.

ವೈಷ್ಣವಿ ಮಂಚನಬೆಲೆ ಗ್ರಾಮದ ಬಿಜಿಎಸ್ ಶಾಲೆಯಲ್ಲಿ ಎಸ್ಎಸ್ಎಲ್‌ಸಿ ಓದುತ್ತಿದ್ದಳು. ನಿನ್ನೆ ಎಸ್ಎಸ್ಎಲ್‌ಸಿ ಫಲಿತಾಂಶ ಬಂದಿತ್ತು. ಫಲಿತಾಂಶ ನೋಡಿ ತಾನು ಫೇಲ್ ಆಗಿದ್ದಕ್ಕೆ ನೊಂದುಕೊಂಡಿದ್ದಳು ಎಂದು ಗೊತ್ತಾಗಿದೆ. ನಂತರ ಮನೆಯಲ್ಲೇ ಯಾರೂ ಇಲ್ಲದಾಗ ನೇಣು ಬಿಗಿದುಕೊಂಡು ಆತ್ಮಹತ್ಯೆಗೆ ಶರಣಾಗಿದ್ದಾಳೆ. ಚಿಕ್ಕಬಳ್ಳಾಪುರ ಗ್ರಾಮಾಂತರ ಪೊಲೀಸ್ ಠಾಣೆ ವ್ಯಾಪ್ತಿಯಲ್ಲಿ ಘಟನೆ ನಡೆದಿದೆ.

ಶಾಲಾ ಪರೀಕ್ಷೆ ಮತ್ತು ಮೌಲ್ಯ ನಿರ್ಣಯ ಮಂಡಳಿಯು ಈಗಾಗಲೇ ಎಸ್‌ಎಸ್‌ಎಲ್‌ಸಿ 1, 2, 3ರ ಹೊಸ ಪರೀಕ್ಷಾ ಮಾದರಿಯನ್ನು ಪರಿಚಯಿಸಿದೆ. ಇದರ ಕ್ರಮವಾಗಿ ಎಸ್‌ಎಸ್‌ಎಲ್‌ಸಿ ಪರೀಕ್ಷೆ 1ರಲ್ಲಿ ಅನುತೀರ್ಣರಾಗಿದ್ದರೆ ಅಥವಾ ಕಡಿಮೆ ಅಂಕ ಪಡೆದು ಜಸ್ಟ್‌ ಪಾಸ್‌ ಆಗಿದ್ದರೆ ಅಂತಹ ವಿದ್ಯಾರ್ಥಿಗಳು ಪರೀಕ್ಷೆ 2ರಲ್ಲಿ ಅಂಕವನ್ನು ಸರಿದೂಗಿಸಿಕೊಳ್ಳಬಹುದಾಗಿದೆ. ಕೇವಲ ಫೇಲ್‌ ಆದವರು, ಕಡಿಮೆ ಅಂಕ ಬಂದವರು ಮಾತ್ರವಲ್ಲ ಹೆಚ್ಚು ಅಂಕ ಗಳಿಸಲು ಯಾವುದೇ ವಿದ್ಯಾರ್ಥಿಯಾದರು ಪರೀಕ್ಷೆ 2 ಹಾಗೂ 3ರಲ್ಲಿ ಹಾಜರಾಗಬಹುದು. ಇದಕ್ಕಾಗಿ ಶಿಕ್ಷಣ ಇಲಾಖೆಯಿಂದಲೇ ಮುಂದಿನ 1 ತಿಂಗಳಲ್ಲಿ ಪರಿಹಾರ ಬೋಧನೆಯನ್ನು ಆಯೋಜಿಸಲಾಗುತ್ತದೆ. ಇದರಿಂದಾಗಿ ಪರೀಕ್ಷೆ 2-3ಕ್ಕೆ ಉತ್ತಮವಾಗಿ ಸಿದ್ಧರಾಗಲು ಸಹಾಯವಾಗುತ್ತದೆ. ಇಷ್ಟನ್ನು ಮನದಟ್ಟು ಮಾಡಿಸಿದ್ದರೂ ಕೆಲವು ವಿದ್ಯಾರ್ಥಿಗಳು ಆತ್ಮಹತ್ಯೆ ಮಾಡಿಕೊಳ್ಳುತ್ತಿರುವುದು ಆತಂಕ ಮೂಡಿಸಿದೆ.

ವಿದ್ಯಾರ್ಥಿ ನೇಣು ಬಿಗಿದು ಆತ್ಮಹತ್ಯೆ

SSLC Result 2024 Failed in SSLC Exam Student suicide in mandya

ಮಂಡ್ಯದಲ್ಲಿ ಎಸ್‌ಎಸ್‌ಎಲ್‌ಸಿ ವಿದ್ಯಾರ್ಥಿಯೊಬ್ಬ ಪರೀಕ್ಷೆಯಲ್ಲಿ ಫೇಲ್‌ ಆದ ಹಿನ್ನೆಲೆಯಲ್ಲಿ ನೇಣು ಬಿಗಿದುಕೊಂಡು ಆತ್ಮಹತ್ಯೆ ಮಾಡಿಕೊಂಡಿದ್ದಾನೆ. ನಿಖಿಲ್ (16) ನೇಣಿಗೆ ಶರಣಾದ ವಿದ್ಯಾರ್ಥಿ. ಮಂಡ್ಯ ಜಿಲ್ಲೆಯ ಮದ್ದೂರು ತಾಲೂಕಿನ ತಗ್ಗಹಳ್ಳಿ ಗ್ರಾಮದಲ್ಲಿ ಸರ್ಕಾರಿ ಪ್ರೌಢಶಾಲೆಯಲ್ಲಿ ವ್ಯಾಸಂಗ ಮಾಡುತ್ತಿದ್ದ ವಿದ್ಯಾರ್ಥಿ ನಿಖಿಲ್, ಫಲಿತಾಂಶ ನೋಡಿ 3 ವಿಷಯದಲ್ಲಿ ಫೇಲ್ ಆದ ಹಿನ್ನೆಲೆಯಲ್ಲಿ ಹೊಲಕ್ಕೆ ತೆರಳಿ ಮರವೊಂದಕ್ಕೆ ನೇಣಿಗೆ ಶರಣಾಗಿದ್ದಾನೆ. ಈ ಕುರಿತು ಕೊಪ್ಪ ಪೊಲೀಸ್ ಠಾಣಾ ವ್ಯಾಪ್ತಿಯಲ್ಲಿ ಪ್ರಕರಣ ದಾಖಲಾಗಿದೆ.

ಪಾಸಾದರೂ ನೇಣು ಹಾಕಿಕೊಂಡು ವಿದ್ಯಾರ್ಥಿನಿ

SSLC Result 2024

ಮಂಡ್ಯ: ಮಂಡ್ಯದಲ್ಲಿ ಎಸ್‌ಎಸ್‌ಎಲ್‌ಸಿ ವಿದ್ಯಾರ್ಥಿನಿಯೊಬ್ಬಳು ನೇಣಿಗೆ ಶರಣಾಗಿದ್ದಾಳೆ. ಪರೀಕ್ಷೆಯಲ್ಲಿ ಪಾಸ್ ಆಗಿದ್ದರೂ ಫೇಲ್ ಎಂದು ತಿಳಿದು ನೇಣಿಗೆ ಶರಣಾದ್ದಾಳೆ. ಅಮೃತ (16) ನೇಣಿಗೆ ಶರಣಾದ ವಿದ್ಯಾರ್ಥಿನಿ. ಮಂಡ್ಯ ಜಿಲ್ಲೆ ಮದ್ದೂರು ತಾಲೂಕಿನ ಹುಲಿಗೆರೆಪುರ ಗ್ರಾಮದಲ್ಲಿ ಘಟನೆ ನಡೆದಿದೆ. ಅಮೃತ ನಗರಕೆರೆ ಗ್ರಾಮದ ಸರ್ಕಾರಿ ಅನುದಾನಿತ ಪೂರ್ಣಿಮಾ ಪ್ರೌಢಶಾಲೆಯಲ್ಲಿ ವ್ಯಾಸಂಗ ಮಾಡುತ್ತಿದ್ದಳು. ಎಸ್‌ಎಸ್‌ಎಲ್‌ಸಿ ಪರೀಕ್ಷೆ ಬರೆದಿದ್ದ ಅಮೃತ ಶೇ.57 ಅಂಕ ಪಡೆದು ತೇರ್ಗಡೆ ಹೊಂದಿದ್ದಳು.

ಆದರೆ ಪರೀಕ್ಷೆಯಲ್ಲಿ ಫೇಲ್‌ ಆಗಿಬಿಟ್ಟೆ ಎಂದು ತಿಳಿದು ಮನೆಯಲ್ಲಿ ಯಾರು ಇಲ್ಲದಾಗ ನೇಣಿಗೆ ಶರಣಾಗಿದ್ದಾಳೆ. ಮೃತ ಕುಟುಂಬಸ್ಥರ ಆಕ್ರಂದನ ಮುಗಿಲು ಮುಟ್ಟಿದೆ. ಮದ್ದೂರು ಪೊಲೀಸ್ ಠಾಣಾ ವ್ಯಾಪ್ತಿಯಲ್ಲಿ ಪ್ರಕರಣ ದಾಖಲಾಗಿದ್ದು, ಮರಣೋತ್ತರ ಪರೀಕ್ಷೆ ಬಳಿಕ ಮೃತದೇಹವನ್ನು ಕುಟುಂಬಸ್ಥರಿಗೆ ಹಸ್ತಾಂತರ ಮಾಡಲಾಗಿದೆ.

ವಿದ್ಯಾರ್ಥಿನಿ ಆತ್ಮಹತ್ಯೆಗೆ ಯತ್ನ

ಬೆಳಗಾವಿ: ಎಸ್ಎಸ್ಎಲ್‌ಸಿ ಪರೀಕ್ಷೆಯಲ್ಲಿ ಅನುತ್ತಿರ್ಣಗೊಂಡ ವಿದ್ಯಾರ್ಥಿನಿಯೋರ್ವಳು ಮನನೊಂದು ಆತ್ಮಹತ್ಯೆಗೆ ಯತ್ನಿಸಿರುವ ಘಟನೆ ಬೆಳಗಾವಿ ಜಿಲ್ಲೆಯ ಚಿಕ್ಕೋಡಿ ತಾಲೂಕಿನ ಯಕ್ಸಂಬಾ ಗ್ರಾಮದಲ್ಲಿ ಜರುಗಿದೆ. ಸೃಷ್ಟಿ ಕಲ್ಲಪ್ಪ ಚೌವ್ಹಾಣ್ (16) ಆತ್ಮಹತ್ಯೆಗೆ ಯತ್ನಿಸಿದ ವಿದ್ಯಾರ್ಥಿನಿಯಾಗಿದ್ದಾಳೆ. ವಿಷ ಸೇವಿಸಿ ಆತ್ಮಹತ್ಯೆಗೆ ಯತ್ನಿಸಿದ್ದು, ಕೂಡಲೇ ಪೋಷಕರು ಖಾಸಗಿ ಆಸ್ಪತ್ರೆಗೆ ದಾಖಲಿಸಿದ್ದಾರೆ. ಸದ್ಯ ಖಾಸಗಿ ಆಸ್ಪತ್ರೆಯ ತೀವ್ರ ನಿಗಾ ಘಟಕದಲ್ಲಿ ಚಿಕಿತ್ಸೆ ಮುಂದುವರೆದಿದೆ. ಸದಲಗಾ ಪೊಲೀಸ್ ಠಾಣಾ ವ್ಯಾಪ್ತಿಯಲ್ಲಿ ಘಟನೆ ನಡೆದಿದೆ.

ಇದನ್ನೂ ಓದಿ:SSLC Result 2024 : ಎಸ್‌ಎಸ್‌ಎಲ್‌ಸಿ ಪರೀಕ್ಷೆಯಲ್ಲಿ ಫೇಲಾದರೂ, ಕಡಿಮೆ ಅಂಕ ಬಂದರೂ ಡೋಂಟ್‌ ವರಿ; ಇನ್ನೂ ಇದೆ ಎರಡು ಚಾನ್ಸ್‌!

Continue Reading

ಮಳೆ

Karnataka Weather : 50 ಕಿ.ಮೀ ವೇಗದಲ್ಲಿ ಬೀಸುತ್ತೆ ಗಾಳಿ; ಗುಡುಗು ಸಹಿತ ಭಾರಿ ಮಳೆಗೆ ಯೆಲ್ಲೋ ಅಲರ್ಟ್‌ ಘೋಷಣೆ

Karnataka Weather Forecast : ರಾಜ್ಯಾದ್ಯಂತ ಬಿರುಗಾಳಿ ಸಹಿತ ಗುಡುಗು ಮಿಂಚಿನ ಭಾರಿ ಮಳೆಯಾಗುವ (Heavy Rain News) ಮುನ್ಸೂಚನೆಯನ್ನು ಹವಾಮಾನ ಇಲಾಖೆ ನೀಡಿದೆ. ಹೀಗಾಗಿ ಆರು ಜಿಲ್ಲೆಗಳಿಗೆ ಯೆಲ್ಲೊ ಅಲರ್ಟ್‌ ಘೋಷಣೆ ಮಾಡಲಾಗಿದ್ದು, ಜೋರಾಗಿ ಗಾಳಿ ಬೀಸುವುದರಿಂದ ಮರದಡಿ ನಿಲ್ಲದಂತೆ ಸೂಚನೆ ನೀಡಲಾಗಿದೆ.

VISTARANEWS.COM


on

By

Karnataka Weather Forecast
ಸಾಂದರ್ಭಿಕ ಚಿತ್ರ
Koo

ಬೆಂಗಳೂರು: ದಕ್ಷಿಣ ಒಳನಾಡಿನಲ್ಲಿ ವ್ಯಾಪಕವಾಗಿ ಹಗುರದಿಂದ ಮಧ್ಯಮ ಮಳೆಯಾಗಲಿದ್ದು, ಪ್ರತ್ಯೇಕ ಕಡೆಗಳಲ್ಲಿ ಭಾರಿ ಮಳೆಯಾಗುವ ಸಾಧ್ಯತೆಯಿದೆ. ಉತ್ತರ ಒಳನಾಡು ಮತ್ತು ಮಲೆನಾಡು ಜಿಲ್ಲೆಗಳಲ್ಲಿ ಚದುರಿದಂತೆ ಹಗುರದಿಂದ ಸಾಧಾರಣ ಮಳೆಯಾಗಲಿದೆ. ಇನ್ನೂ ಕರಾವಳಿಐಲ್ಲಿ ಮಧ್ಯಮ ಮಳೆಯಾಗುವ (Rain News) ನಿರೀಕ್ಷೆ ಇದೆ. ಜತೆಗೆ ಪ್ರತ್ಯೇಕ ಸ್ಥಳಗಳಲ್ಲಿ ಗುಡುಗು ಸಹಿತ ಮಿಂಚು ಮತ್ತು ಗಾಳಿಯು ಗಂಟೆಗೆ 30-40 ಕಿ.ಮೀ ವೇಗದಲ್ಲಿ ಬೀಸುವ ಸಾಧ್ಯತೆ ಎಂದು ಹವಾಮಾನ ಇಲಾಖೆ ಮುನ್ಸೂಚನೆಯನ್ನು (Karnataka Weather Forecast) ನೀಡಿದೆ.

ದಕ್ಷಿಣ ಒಳನಾಡಿನ ಚಾಮರಾಜನಗರ, ಮಂಡ್ಯ, ರಾಮನಗರ, ತುಮಕೂರು, ಚಿಕ್ಕಬಳ್ಳಾಪುರ, ಕೋಲಾರ, ಬೆಂಗಳೂರು ಗ್ರಾಮಾಂತರ ಮತ್ತು ಬೆಂಗಳೂರು ನಗರ ಜಿಲ್ಲೆಗಳಲ್ಲಿ ಗುಡುಗು ಸಹಿತ ಭಾರಿ ಮಳೆಯಾಗುವ ಸಾಧ್ಯತೆ ಇದೆ. ಉಳಿದ ಭಾಗಗಳಲ್ಲಿ ಹಗುರದಿಂದ ಮಧ್ಯಮ ಮಳೆಯಾಗುವ ಸಾಧ್ಯತೆಯಿದೆ. ಉತ್ತರ ಒಳನಾಡಿನ ಬಳ್ಳಾರಿ ಮತ್ತು ರಾಯಚೂರು ಹಾಗೂ ಕಲಬುರಗಿ, ಯಾದಗಿರಿ, ಕೊಪ್ಪಳ, ವಿಜಯನಗರ, ಗದಗ ಮತ್ತು ಬಾಗಲಕೋಟೆ ಜಿಲ್ಲೆಗಳಲ್ಲಿ ಸಾಧಾರಣ ಮಳೆಯಾಗುವ ಸಾಧ್ಯತೆಯಿದೆ. ಉಳಿದಂತೆ ಹಗುರವಾದ ಮಳೆಯಾಗುವ ನಿರೀಕ್ಷೆ ಇದೆ.

ಮಲೆನಾಡಿನ ಹಾಸನ, ಚಿಕ್ಕಮಗಳೂರು, ಕೊಡಗು, ಶಿವಮೊಗ್ಗದಲ್ಲಿ ಚದುರಿದಂತೆ ಸಾಧಾರಣ ಮಳೆಯಾಗುವ ಸಾಧ್ಯತೆ ಇದೆ. ಕರಾವಳಿಯ ದಕ್ಷಿಣ ಕನ್ನಡ ಜಿಲ್ಲೆಯಲ್ಲಿ ಚದುರಿದಂತೆ ಸಾಧಾರಣ ಮಳೆಯಾಗುವ ಸಾಧ್ಯತೆಯಿದ್ದು, ಉಡುಪಿ ಮತ್ತು ಉತ್ತರ ಕನ್ನಡ ಜಿಲ್ಲೆಗಳಲ್ಲಿ ಹಗುರದಿಂದ ಕೂಡಿರಲಿದೆ.

ಇದನ್ನೂ ಓದಿ: Akshaya Tritiya Fashion: ಅಕ್ಷಯ ತೃತೀಯಕ್ಕೆ ಬಂತು ಬಂಗಾರದ ಆಕರ್ಷಕ ಮೂಗಿನ ಸ್ಟಡ್ಸ್

ಬೆಂಗಳೂರಲ್ಲಿ ಭಾರಿ ಮಳೆ ಮುನ್ಸೂಚನೆ

ಬೆಂಗಳೂರು ನಗರ ವ್ಯಾಪ್ತಿಯಲ್ಲಿ ಸಾಧಾರಣದಿಂದ ಭಾರಿ ಮಳೆಯಾಗುವ ಸಾಧ್ಯತೆಯಿದೆ. ಗರಿಷ್ಠ ಉಷ್ಣಾಂಶ 34 ಡಿಗ್ರಿ ಸೆಲ್ಸಿಯಸ್ ಇರಲಿದ್ದು, ಕನಿಷ್ಠ ಉಷ್ಣಾಂಶ 21 ಡಿಗ್ರಿ ಸೆಲ್ಸಿಯಸ್ ಇರಲಿದೆ.

ಯೆಲ್ಲೋ ಅಲರ್ಟ್‌

ಭಾರೀ ಮಳೆಯೊಂದಿಗೆ ಗುಡುಗು ಸಹಿತ ಬಿರುಗಾಳಿ (ಗಂಟೆಗೆ 40-50 ಕಿ.ಮೀ) ಬೀಸಲಿದೆ. ಹೀಗಾಗಿ ಐಎಂಡಿ ಹಳದಿ ಎಚ್ಚರಿಕೆಯನ್ನು ನೀಡಿದೆ. ಮುಖ್ಯವಾಗಿ ಬೆಂಗಳೂರು ಗ್ರಾಮಾಂತರ, ಬೆಂಗಳೂರು ನಗರ, ಚಾಮರಾಜನಗರ, ಕೋಲಾರ, ಮಂಡ್ಯ ಮತ್ತು ಮೈಸೂರು ಜಿಲ್ಲೆಗಳಲ್ಲಿ ಗುಡುಗು ಸಹಿತ ಭಾರಿ ಮಳೆಯಾಗುವ ಸಾಧ್ಯತೆ ಇರುವುದರಿಂದ ಯೆಲ್ಲೋ ಅಲರ್ಟ್ ಘೋಷಿಸಲಾಗಿದೆ.

ಈ ಸಂಗತಿಯ ಕುರಿತು ನಿಮ್ಮ ಅನಿಸಿಕೆ ಏನು? ಕಾಮೆಂಟ್ ಮೂಲಕ ತಿಳಿಸಿ

Continue Reading

ಮಳೆ

Karnataka Weather : ಕೊಡಗು, ಕೊಪ್ಪಳ ಸೇರಿ ಹಲವೆಡೆ ಅಬ್ಬರಿಸುತ್ತಿರುವ ಗಾಳಿ- ಮಳೆ; ನಾಳೆಗೂ ವಾರ್ನಿಂಗ್‌

Karnataka Weather Forecast : ವಿವಿಧೆಡೆ ಭಾರಿ ಗಾಳಿ-ಮಳೆಗೆ (Rain News) ಅನಾಹುತಗಳು ಸಂಭವಿಸಿದೆ. ಮಡಿಕೇರಿಯಲ್ಲಿ ಮಳೆ-ಗಾಳಿಗೆ ಕಾರಿನ ಮೇಲೆ ಮರ ಬಿದ್ದು ಜಖಂಗೊಂಡಿದೆ. ಶುಕ್ರವಾರವು ಗುಡುಗು ಸಹಿತ ಮಳೆಯಾಗುವ ಎಚ್ಚರಿಕೆಯನ್ನು ಹವಾಮಾನ ಇಲಾಖೆ ನೀಡಿದೆ. ಇತ್ತ ಮಳೆಗಾಗಿ ಮಕ್ಕಳಿಗೆ ಮದುವೆ ಮಾಡಿಸಿದ ಪ್ರಸಂಗವು ನಡೆದಿದೆ.

VISTARANEWS.COM


on

By

karnataka weather Forecast
Koo

ಕೊಡಗು/ಕೊಪ್ಪಳ/ಬೆಂಗಳೂರು: ರಾಜ್ಯದ ಹಲವೆಡೆ ಗಾಳಿ ಸಹಿತ ಮಳೆಯು (Rain News) ಅಬ್ಬರಿಸುತ್ತಿದೆ. ಗುರುವಾರದಂದು ಕೊಡಗು‌ ಜಿಲ್ಲೆಯ ವಿವಿಧೆಡೆ ಗುಡುಗು ಸಹಿತ (Karnataka Weather Forecast) ಮಳೆಯಾಗಿದೆ. ಕಳೆದೆರಡು ದಿನಗಳಿಂದ ಸಂಜೆಯಾಗುತ್ತಿದ್ದಂತೆ ಮಳೆಯ ಸಿಂಚನವಾಗುತ್ತಿದೆ. ಮುಂಜಾನೆ ಮೋಡ‌ ಕವಿದ ವಾತಾವರಣವಿದ್ದು, ಸಂಜೆ‌ ಅಬ್ಬರದೊಂದಿಗೆ ಮಳೆ ಸುರಿಯುತ್ತಿದೆ. ಮಳೆಯಿಂದ ಕೊಡಗಿನ‌ ರೈತರು ಹಾಗೂ ಸಾರ್ವಜನಿಕರ ಮೊಗದಲ್ಲಿ ಮಂದಹಾಸ ಮೂಡಿದೆ. ಮಡಿಕೇರಿ ಸಮೀಪ ನಿಲ್ಲಿಸಿದ್ದ ಕಾರಿನ ಮೇಲೆ ಭಾರಿ ಗಾಳಿ‌ಗೆ ಮರವು ಧರೆಗುರುಳಿದೆ. ಮಡಿಕೇರಿಯ ಸುದರ್ಶನ ಅಥಿತಿಗೃಹದ ಬಳಿ ಘಟನೆ ನಡೆದಿದೆ. ಅದೃಷ್ಟವಶಾತ್‌ ಕಾರಿನೊಳಗೆ ಯಾರು ಇರಲಿಲ್ಲ.

ಇತ್ತ ಕೊಪ್ಪಳ ಜಿಲ್ಲೆಯ ಕೆಲವೆಡೆ ಮಳೆಯಾಗಿದೆ. ಬಿಸಿಲನಿಂದ ಕಂಗೆಟ್ಟ ಜನರಿಗೆ ಗಾಳಿ ಸಹಿತ ಮಳೆಯು ಅಬ್ಬರಿಸಿದೆ. ಕೊಪ್ಪಳ ಜಿಲ್ಲೆ ಕಾರಟಗಿ ತಾಲೂಕಿನಲ್ಲಿ ಜೋರಾಗಿ ಮಳೆಯಾಗಿದೆ. ಬೆಂಗಳೂರಿನ ದೇವನಹಳ್ಳಿಯಲ್ಲಿರುವ ಏರ್‌ಪೋರ್ಟ್‌ನಲ್ಲೂ ಉತ್ತಮ ಮಳೆಯಾಗಿದೆ. ಬೆಳಗ್ಗೆನಿಂದ ಬಿಸಿಲಿಗೆ ಕಂಗೆಟ್ಟಿದ್ದ ಏರ್‌ಪೋರ್ಟ್‌ ಪ್ರಯಾಣಿಕರು, ಟ್ಯಾಕ್ಸಿ ಚಾಲಕರು ಮಳೆ ಆಗಮನದಿಂದ ಖುಷಿಯಾದರು. ಮಳೆಗೆ ವಾತಾವರಣವು ಕೂಲ್‌ ಆಗಿತ್ತು.

ವಿಜಯನಗರದಲ್ಲಿ ಮಳೆಗೆ ಉರುಳಿದ ಬಾಳೆ ಬೆಳೆ

ಹಂಪಿ ಪರಿಸರದಲ್ಲಿ ಸುರಿದ ಮಳೆಗೆ ಬಾಳೆ ಬೆಳೆ ಉರುಳಿದ ಘಟನೆ ವಿಜಯನಗರ ಜಿಲ್ಲೆಯ ಹೊಸಪೇಟೆ ತಾಲೂಕಿನ ವೆಂಕಟಾಪುರ ಗ್ರಾಮದಲ್ಲಿ ನಡೆದಿದೆ. ಗಾಳಿ, ಮಳೆಗೆ ಸಾವಿರಾರು ಬಾಳೆಗಿಡಗಳು ನೆಲಕ್ಕುರುಳಿವೆ. ರೈತಾಪಿ ವರ್ಗ ವರ್ಷದ ಮೊದಲ ದೊಡ್ಡ ಮಳೆ ಎಂದೇ ಕೊಂಡಾಡಿದ್ದಾರೆ. ವೆಂಕಟಾಪುರ ಮಾಗಣೆ, ನಿಂಬಾಪುರ, ಬುಕ್ಕಸಾಗರ ಮಾಗಣೆ ಗ್ರಾಮಗಳಲ್ಲಿ ಬಾಳೆ ಬೆಳೆ ನೆಲಕ್ಕೆ ಬಿದ್ದಿದೆ.

ರೈತರು ಹೆಚ್ಚಾಗಿ ಸುಗಂದಿ, ಏಲಕ್ಕಿ, ಸಕ್ಕರೆ ಬಾಳೆಯನ್ನು ಬೆಳೆದಿದ್ದರು. ವೆಂಕಟಾಪುರ ಮಾಗಣೆಯಲ್ಲಿ ಗ್ರಾಮದಲ್ಲಿ ಬಾಳೆಗಿಡಗಳಿಗೆ ಹೆಚ್ಚಿನ ಹಾನಿಯಾಗಿದೆ. ಎಕರೆಗೆ 900 ಗಿಡಗಳು ನೆಟ್ಟಿದರೆ ಕೆಲವೆಡೆ 300 ರಿಂದ 400 ಬಾಳೆ ಗಿಡ ನೆಲಸಮವಾಗಿವೆ. ಕೆಲವೆಡೆ ಎಕೆರೆಗಟ್ಟಲೇ ಗಿಡಗಳು ನೆಲಕ್ಕುರುಳಿವೆ ಎಂದು ಕೃಷಿ ಅಧಿಕಾರಿಗಳು ಮಾಹಿತಿ ನೀಡಿದ್ದಾರೆ. ಬಾಳೆ ಬೆಳೆ ಹಾನಿಗೊಳಗಾದ ರೈತರಿಗೆ ಸೂಕ್ತ ಪರಿಹಾರದ ಭರವಸೆಯನ್ನು ಜಿಲ್ಲಾಡಳಿತ ನೀಡಿದೆ. ಇನ್ನೂ ಹಲವು ತಿಂಗಳಿಂದ ತುರ್ತಾ, ಬಸವಣ್ಣ, ರಾಯ ಕಾಲುವೆಗಳಲ್ಲಿ ನೀರಿಲ್ಲದೇ ಬರಿದಾಗಿತ್ತು. ಇದೀಗ ಮಳೆಗೆ ಕಾಲುವೆಗಳಲ್ಲೂ ನೀರು ಹರಿದಿದ್ದು, ರೈತರಲ್ಲೂ ಕೊಂಚ ಸಂತಸಗೊಂಡಿದ್ದಾರೆ.

ತುಮಕೂರಲ್ಲಿ ಮಳೆಗಾಗಿ ಮಕ್ಕಳಿಗೆ ಮದುವೆ

ಕೆಲವೆಡೆ ಮಳೆಯು ಅಬ್ಬರಿಸುತ್ತಿದ್ದರೆ ಇತ್ತ ಮಳೆಗಾಗಿ ವಿಶೇಷ ಪೂಜೆ-ಪುನಸ್ಕಾರಗಳು ನಡೆಯುತ್ತಿವೆ. ಮಳೆಗಾಗಿ ತುಮಕೂರಿನಲ್ಲಿ ವಿಶೇಷ ಪ್ರಾರ್ಥನೆ ಸಲ್ಲಿಸಲಾಗಿದೆ. ತೀವ್ರ ಬರ ಹಿನ್ನೆಲೆಯಲ್ಲಿ ಬೆಳದಿಂಗಳು ಹಬ್ಬ ಆಚರಣೆ ಮಾಡಿ ಮಳೆಗಾಗಿ ಪ್ರಾರ್ಥಿಸಿದ್ದಾರೆ. ಚಿಕ್ಕ ಮಕ್ಕಳಿಗೆ ವಧು-ವರರಂತೆ ಸಿಂಗಾರಿಸಿ, ಅಲಂಕಾರಿಸಿ ಮದುವೆ ಮಾಡಿ ವಿಶೇಷ ಆಚರಣೆ ಮಾಡಿದ್ದಾರೆ. ತುಮಕೂರಿನ ಜಯಪುರ ಬಡಾವಣೆಯಲ್ಲಿ ಘಟನೆ ನಡೆದಿದೆ. ಮಳೆಗಾಗಿ ಜನರು ಹಲವು ಆಚರಣೆಗಳ ಮೊರೆ ಹೋಗಿದ್ದಾರೆ.

ಇದನ್ನೂ ಓದಿ: SSLC Result 2024: ಪಾಸ್ ಆಗಿದ್ದರೂ ಫೇಲ್ ಎಂದು ತಿಳಿದು ನೇಣಿಗೆ ಶರಣಾದ ಎಸ್‌ಎಸ್‌ಎಲ್‌ಸಿ ವಿದ್ಯಾರ್ಥಿನಿ

ಭಾರಿ ಮಳೆಯೊಂದಿಗೆ ರಭಸವಾಗಿ ಬೀಸಲಿದೆ ಗಾಳಿ

ಮೇ 10ರಂದು ದಕ್ಷಿಣ ಒಳನಾಡಿನ ಚಾಮರಾಜನಗರ, ಮೈಸೂರು, ಮಂಡ್ಯ, ಕೋಲಾರ, ಹಾಸನ, ಬೆಂಗಳೂರು ನಗರ ಮತ್ತು ಬೆಂಗಳೂರು ಗ್ರಾಮಾಂತರ ಗುಡುಗು ಸಹಿತ ಭಾರಿ ಮಳೆಯಾಗಲಿದೆ. ಕೆಲವು ಸ್ಥಳಗಳಲ್ಲಿ ಗಾಳಿಯು 40-50 ಕಿ.ಮೀ ವೇಗದಲ್ಲಿ ಬೀಸಲಿದೆ.

ಮಲೆನಾಡಿನ ಚಿಕ್ಕಮಗಳೂರು, ಹಾಸನ, ಕೊಡಗು ಮತ್ತು ದಕ್ಷಿಣ ಒಳನಾಡಿನಲ್ಲಿ ತುಮಕೂರು ಜಿಲ್ಲೆಗಳಲ್ಲಿ ಕೆಲವು ಸ್ಥಳಗಳಲ್ಲಿ ಗಾಳಿಯೊಂದಿಗೆ (40-50 kmph) ಸಾಧಾರಣ ಮಳೆಯಾಗುವ ಸಾಧ್ಯತೆಯಿದೆ. ಜತೆಗೆ ಬಳ್ಳಾರಿ, ಚಿಕ್ಕಬಳ್ಳಾಪುರ, ಚಿತ್ರದುರ್ಗ, ದಾವಣಗೆರೆ, ರಾಮನಗರ, ಶಿವಮೊಗ್ಗ ಮತ್ತು ವಿಜಯನಗರ ಜಿಲ್ಲೆಗಳಲ್ಲಿ ಗುಡುಗು ಸಹಿತ ಹಗುರದಿಂದ ಸಾಧಾರಣ ಮಳೆಯಾಗುವ ಸಾಧ್ಯತೆಯಿದೆ.

ಬೀದರ್, ಕಲಬುರಗಿ, ಯಾದಗಿರಿ, ಕೊಪ್ಪಳ ಜಿಲ್ಲೆಗಳಲ್ಲಿ ಕೆಲವೆಡೆ ಬಿರುಸಿನ ಗಾಳಿಯೊಂದಿಗೆ ಗುಡುಗು ಸಹಿತ ಮಧ್ಯಮ ಮಳೆಯಾಗಲಿದೆ. ರಾಯಚೂರು, ಕೊಪ್ಪಳ, ಬಾಗಲಕೋಟೆ, ವಿಜಯಪುರದಲ್ಲೂ ಉತ್ತಮ ಮಳೆಯಾಗುವ ನಿರೀಕ್ಷೆ ಇದೆ. ದಕ್ಷಿಣ ಕನ್ನಡ ಜಿಲ್ಲೆಯ ಕೆಲವು ಸ್ಥಳಗಳಲ್ಲಿ ಹಗುರದಿಂದ ಸಾಧಾರಣ ಮಳೆಯಾಗುವ ಸಾಧ್ಯತೆಯಿದೆ. ರಾಜ್ಯಾದ್ಯಂತ ಮುಂದಿನ 24 ಗಂಟೆಯಲ್ಲಿ ಗರಿಷ್ಠ ತಾಪಮಾನವು 2-4 ಡಿ.ಸೆ ಕಡಿಮೆಯಾಗುವ ಸಾಧ್ಯತೆ ಇದೆ.

ಇನ್ನೂ ರಾಜಧಾನಿ ಬೆಂಗಳೂರಿನಲ್ಲಿ ಸಾಮಾನ್ಯವಾಗಿ ಮೋಡ ಕವಿದ ವಾತಾವರಣ ಇರಲಿದೆ. ಕೆಲವು ಪ್ರದೇಶಗಳಲ್ಲಿ ಸಂಜೆ ಅಥವಾ ರಾತ್ರಿಗೆ ಗುಡುಗು ಸಹಿತ ಮಳೆಯಾಗಲಿದೆ. ಗರಿಷ್ಠ ಹಾಗೂ ಕನಿಷ್ಠ ಉಷ್ಣಾಂಶವು ಕ್ರಮವಾಗಿ 34-22 ಡಿ.ಸೆ ಇರಲಿದೆ.

ಈ ಸಂಗತಿಯ ಕುರಿತು ನಿಮ್ಮ ಅನಿಸಿಕೆ ಏನು? ಕಾಮೆಂಟ್ ಮೂಲಕ ತಿಳಿಸಿ

Continue Reading
Advertisement
KEA
ಕರ್ನಾಟಕ3 mins ago

UGCET 2024: ಯುಜಿಸಿಇಟಿ ಅರ್ಜಿ ತಿದ್ದುಪಡಿಗೆ ಅಂತಿಮ ಅವಕಾಶ ನೀಡಿದ ಕೆಇಎ; ಕೊನೆಯ ದಿನಾಂಕ ಯಾವಾಗ?

Money Guide
ಮನಿ-ಗೈಡ್5 mins ago

Money Guide: ಭಾರತದಲ್ಲಿಯೂ ಆರಂಭವಾಯ್ತು ಬಹು ನಿರೀಕ್ಷಿತ ಗೂಗಲ್ ವ್ಯಾಲೆಟ್‌; ಇದು ಗೂಗಲ್‌ ಪೇಗಿಂತ ಹೇಗೆ ಭಿನ್ನ?

Sam Pitroda
ದೇಶ6 mins ago

ಪಿತ್ರೋಡಾ ‘ಸಂಪತ್ತು ಹಂಚಿಕೆ’ ಹೇಳಿಕೆ, ಮಣಿಶಂಕರ್‌ ಅಯ್ಯರ್‌ ಪಾಕ್‌ ಪ್ರೇಮ; ಕಾಂಗ್ರೆಸ್‌ಗೆ ಈಗ ತೀವ್ರ ಫಜೀತಿ!

IPL 2024
ಕ್ರೀಡೆ16 mins ago

IPL 2024: ಕೆ.ಎಲ್​ ರಾಹುಲ್​ಗೆ ಬೈದ ಎಲ್​​ಎಸ್​​ಜಿ ಮಾಲೀಕ ಗೋಯೆಂಕಾ ವರ್ತನೆಗೆ ಮೊಹಮ್ಮದ್​ ಶಮಿ ಆಕ್ರೋಶ

Self Harming Murder case In kodagu
ಕೊಡಗು23 mins ago

Self Harming : ಕೊಡಗಿನಲ್ಲಿ ಬಾಲಕಿಯ ರುಂಡ ಕತ್ತರಿಸಿದ್ದ ಪ್ರೇಮಿ ನೇಣಿಗೆ ಶರಣು

IPL 2024
ಕ್ರೀಡೆ35 mins ago

IPL 2024 : ಆರ್​ಸಿಬಿಯ ಪ್ಲೇಆಫ್​ ಚಾನ್ಸ್​ ಇದೆಯೇ? ಇಲ್ಲಿದೆ ನೋಡಿ ಲೆಕ್ಕಾಚಾರ

Prajwal Revanna case SIT did not contact woman to file false case
ಕ್ರೈಂ38 mins ago

Prajwal Revanna case: ಸುಳ್ಳು ಕೇಸ್‌ ಹಾಕಲು ಮಹಿಳೆಯನ್ನು SIT ಸಂಪರ್ಕ ಮಾಡಿಲ್ಲ; ಕಾಟ ಕೊಟ್ಟವನನ್ನು ಬಿಡಲ್ಲ!

Murder case
ಕ್ರೈಂ44 mins ago

Murder case : ತೃತೀಯ ಲಿಂಗಿಯನ್ನು ಕೊಂದ ಮಹಿಳೆ; ಮಗನಿಗೆ ನಾಯಿ ಚೈನ್‌ ಹಾಕಿ ಎಳೆಯುವಾಗ ಸಾವು

IPL 2024
ಪ್ರಮುಖ ಸುದ್ದಿ59 mins ago

IPL 2024 : ರಾಹುಲ್ ದ್ರಾವಿಡ್ ಸೃಷ್ಟಿಸಿದ್ದ 14 ವರ್ಷಗಳ ಹಿಂದಿನ ದಾಖಲೆ ಮುರಿದ ದಿನೇಶ್ ಕಾರ್ತಿಕ್

Madara Channaiah Gurupeeta
ಕರ್ನಾಟಕ1 hour ago

Madara Channaiah Gurupeeta: ಮಾದಾರ ಚನ್ನಯ್ಯ ಗುರುಪೀಠಕ್ಕೆ ನೂತನ ವಟು ಸ್ವೀಕಾರ

Sharmitha Gowda in bikini
ಕಿರುತೆರೆ7 months ago

Geetha Serial Kannada: ನಿದ್ದೆ ಕದ್ದ ಚೋರಿ! ನಟಿ `ಭಾನುಮತಿ’ ಹಾಟ್‌ ಪೋಟೊಗಳಿಗೆ ಫ್ಯಾನ್ಸ್ ಫುಲ್ ಫಿದಾ

Kannada Serials
ಕಿರುತೆರೆ7 months ago

Kannada Serials TRP: 2ನೇ ಸ್ಥಾನದಲ್ಲಿ 2 ಧಾರಾವಾಹಿಗಳು; ಟಿಆರ್‌ಪಿ ರೇಸ್‌ನಲ್ಲಿಲ್ಲ ಭಾಗ್ಯಲಕ್ಷ್ಮೀ!

Bigg Boss- Saregamapa 20 average TRP
ಕಿರುತೆರೆ7 months ago

Kannada Serials TRP: ಏಳನೇ ಸ್ಥಾನಕ್ಕೆ ʻಅಮೃತಧಾರೆʼ ಕುಸಿತ; ಬಿಗ್‌ ಬಾಸ್‌-ಸರಿಗಮಪ ಟಿಆರ್‌ಪಿ ಎಷ್ಟು?

galipata neetu
ಕಿರುತೆರೆ5 months ago

Kanyadana Serial: ಕಿರುತೆರೆಗೆ ಮತ್ತೆ ಎಂಟ್ರಿ ಕೊಟ್ಟ ʻಗಾಳಿಪಟʼ ಖ್ಯಾತಿಯ ʻನೀತುʼ!

Kannada Serials
ಕಿರುತೆರೆ8 months ago

Kannada Serials TRP: ನಾಲ್ಕನೇ ಸ್ಥಾನಕ್ಕೆ ಕುಸಿತ ಕಂಡ ʻಸೀತಾ ರಾಮʼ; ಟಿಆರ್‌ಪಿ ರೇಸ್‌ಗೆ ʻಭಾಗ್ಯಲಕ್ಷ್ಮಿʼ ಬ್ಯಾಕ್‌!

Kannada Serials
ಕಿರುತೆರೆ7 months ago

Kannada Serials TRP: ಟಿಆರ್‌ಪಿಯಲ್ಲಿ ʻಭಾಗ್ಯಲಕ್ಷ್ಮೀʼ ಹವಾ; ʻಪುಟ್ಟಕ್ಕನ ಮಕ್ಕಳುʼ ಧಾರಾವಾಹಿಗೆ ಸಂಕಷ್ಟ!

Bigg Boss' dominates TRP; Sita Rama fell to the sixth position
ಕಿರುತೆರೆ7 months ago

Kannada Serials TRP: ಟಿಆರ್‌ಪಿಯಲ್ಲಿ ʻಬಿಗ್ ಬಾಸ್ʼದೇ ಮೇಲುಗೈ; 6ನೇ ಸ್ಥಾನಕ್ಕೆ ಕುಸಿದ ʻಸೀತಾ ರಾಮʼ

geetha serial Dhanush gowda engagement
ಕಿರುತೆರೆ5 months ago

Dhanush Gowda: ಗೀತಾ ಧಾರಾವಾಹಿ ನಟನ ನಿಶ್ಚಿತಾರ್ಥ; ಭವ್ಯಾಳ ಕಮೆಂಟ್‌ ಬಾಕ್ಸ್‌ ಆಫ್‌!

varun
ಕಿರುತೆರೆ6 months ago

Brindavana Serial: ʼಬೃಂದಾವನʼ ಧಾರಾವಾಹಿಯಲ್ಲಿ ದೊಡ್ಡ ಟ್ವಿಸ್ಟ್‌; ಪ್ರಮುಖ ಪಾತ್ರಧಾರಿಯೇ ಬದಲು

Kannada Serials
ಕಿರುತೆರೆ8 months ago

Kannada Serials TRP: ಟಿಆರ್‌ಪಿಯಲ್ಲಿ ಏರಿಕೆ ಕಂಡ ʻಅಮೃತಧಾರೆʼ; ʻಗಟ್ಟಿಮೇಳʼಕ್ಕೆ ನಾಲ್ಕನೇ ಸ್ಥಾನ!

Physical Abuse The public prosecutor called the client woman to the lodge
ಕ್ರೈಂ3 hours ago

Physical Abuse : ಲೈಂಗಿಕ ದೌರ್ಜನ್ಯ; ಕಕ್ಷಿದಾರ ಮಹಿಳೆಯನ್ನು ಮಂಚಕ್ಕೆ ಕರೆದ ಪಬ್ಲಿಕ್ ಪ್ರಾಸಿಕ್ಯೂಟರ್!

murder case kalaburagi
ಕಲಬುರಗಿ4 hours ago

Murder Case : ಕಾಂಗ್ರೆಸ್‌ಗೆ ವೋಟ್‌ ಹಾಕಿದ್ದಕ್ಕೆ ಅಮಾವಾಸ್ಯೆ ದಿನ ಕರೆದು ಕೊಂದರು

Rain Effect In karnataka
ಮಳೆ6 hours ago

Rain Effect : ಬಿರುಗಾಳಿ ರಭಸಕ್ಕೆ ಮನೆಯ ಗೇಟ್ ಬಿದ್ದು ಬಾಲಕಿ ಸಾವು; ಸಿಡಿಲಿಗೆ ಎತ್ತುಗಳು ಬಲಿ

Dina Bhavishya
ಭವಿಷ್ಯ12 hours ago

Dina Bhavishya: ಶುಭ ಶುಕ್ರವಾರ ಈ ರಾಶಿಯವರಿಗೆ ಖುಲಾಯಿಸಲಿದೆ ಲಕ್‌

Prajwal Revanna case Revanna bail plea to be heard on Monday Advocate Nagesh argument was as follows
ಕ್ರೈಂ19 hours ago

Prajwal Revanna Case: ರೇವಣ್ಣ ಜಾಮೀನು ಅರ್ಜಿ ಸೋಮವಾರಕ್ಕೆ: ಎಸ್‌ಐಟಿಗೆ ಹಿಗ್ಗಾಮುಗ್ಗಾ ತರಾಟೆ; ವಕೀಲ ನಾಗೇಶ್‌ ವಾದ ಹೀಗಿತ್ತು!

Prajwal Revanna Case Hasanambe is going to destroy this government HD Kumaraswamy curse
ರಾಜಕೀಯ21 hours ago

Prajwal Revanna Case: ಈ ಸರ್ಕಾರವನ್ನು ಹಾಸನಾಂಬೆ ಧ್ವಂಸ ಮಾಡಲಿದ್ದಾಳೆ: ಎಚ್‌ಡಿಕೆ ಶಾಪ

Prajwal Revanna Case DK Shivakumar alleged mastermind in 25000 pen drive allotment
ಹಾಸನ21 hours ago

Prajwal Revanna Case: 25,000 ಪೆನ್ ಡ್ರೈವ್ ಹಂಚಿಕೆಯಲ್ಲಿ ಡಿ.ಕೆ. ಶಿವಕುಮಾರ್ ಮಾಸ್ಟರ್ ಮೈಂಡ್ ಎಂದು ರಾಜ್ಯಪಾಲರಿಗೆ ದೂರು!

SSLC Result 2024 what is the reason for most of the students fail in SSLC
ಕರ್ನಾಟಕ1 day ago

SSLC Result 2024: ಎಸ್‌ಎಸ್‌ಎಲ್‌ಸಿಯಲ್ಲಿ ಹೆಚ್ಚಿನ ಮಕ್ಕಳು ಫೇಲ್‌ ಆಗಲು ಶಿಕ್ಷಣ ಇಲಾಖೆಯ ಈ ನಿರ್ಧಾರವೇ ಕಾರಣ!

Sslc exam Result 2024
ಶಿಕ್ಷಣ1 day ago

SSLC Result 2024 : ಎಸ್‌ಎಸ್‌ಎಲ್‌ಸಿ ಪರೀಕ್ಷೆಯಲ್ಲಿ ಫೇಲಾದರೂ, ಕಡಿಮೆ ಅಂಕ ಬಂದರೂ ಡೋಂಟ್‌ ವರಿ; ಇನ್ನೂ ಇದೆ ಎರಡು ಚಾನ್ಸ್‌!

SSLC Result 2024 secret behind 20 percent grace marks
ಕರ್ನಾಟಕ1 day ago

SSLC Result 2024: ಎಸ್‌ಎಸ್‌ಎಲ್‌ಸಿಯಲ್ಲಿ ಈ ಬಾರಿ ನೂರಕ್ಕೆ 25 ಅಂಕ ಪಡೆದವರೂ ಪಾಸ್! ಶೇ. 20 ಗ್ರೇಸ್ ಮಾರ್ಕ್ಸ್ ಕೊಟ್ಟಿದ್ದರ ಹಿಂದಿದೆ ಇಂಟರೆಸ್ಟಿಂಗ್ ಕತೆ!

ಟ್ರೆಂಡಿಂಗ್‌