NEET MDS 2024: ನೀಟ್‌ ಎಂಡಿಎಸ್‌ ಪರೀಕ್ಷೆ ಮುಂದೂಡಲು ನಿರಾಕರಿಸಿದ ಸುಪ್ರೀಂ ಕೋರ್ಟ್‌ ಹೇಳಿದ್ದೇನು? - Vistara News

ಶಿಕ್ಷಣ

NEET MDS 2024: ನೀಟ್‌ ಎಂಡಿಎಸ್‌ ಪರೀಕ್ಷೆ ಮುಂದೂಡಲು ನಿರಾಕರಿಸಿದ ಸುಪ್ರೀಂ ಕೋರ್ಟ್‌ ಹೇಳಿದ್ದೇನು?

NEET MDS 2024: ರಾಷ್ಟ್ರೀಯ ಅರ್ಹತಾ ಪ್ರವೇಶ ಪರೀಕ್ಷೆ-ಮಾಸ್ಟರ್ ಆಫ್ ಡೆಂಟಲ್ ಸರ್ಜರಿ 2024 ಅನ್ನು ಮುಂದೂಡಲು ಸುಪ್ರೀಂ ಕೋರ್ಟ್ ಶುಕ್ರವಾರ ನಿರಾಕರಿಸಿದೆ.

VISTARANEWS.COM


on

exam writing
ಮಹತ್ವದ, ಕುತೂಹಲಕರ ಸುದ್ದಿಗಾಗಿ ಫಾಲೊ ಮಾಡಿ
Koo

ನವದೆಹಲಿ: ರಾಷ್ಟ್ರೀಯ ಅರ್ಹತಾ ಪ್ರವೇಶ ಪರೀಕ್ಷೆ-ಮಾಸ್ಟರ್ ಆಫ್ ಡೆಂಟಲ್ ಸರ್ಜರಿ 2024 (NEET MDS 2024) ಅನ್ನು ಮುಂದೂಡಲು ಸುಪ್ರೀಂ ಕೋರ್ಟ್ (Supreme Court) ಶುಕ್ರವಾರ ನಿರಾಕರಿಸಿದೆ. ಮಾರ್ಚ್ 18ರಂದು ನಿಗದಿಯಾಗಿರುವ ಪರೀಕ್ಷೆಯನ್ನು ಮುಂದೂಡುವಂತೆ ಕೋರಿ ವಿದ್ಯಾರ್ಥಿಗಳು ಸಲ್ಲಿಸಿದ ವಿವಿಧ ಅರ್ಜಿಗಳಲ್ಲಿನ ವಾದಗಳನ್ನು ಆಲಿಸಿದ ನಂತರ ಸುಪ್ರೀಂ ಕೋರ್ಟ್ ಈ ತೀರ್ಪು ನೀಡಿದೆ.

ವಿಚಾರಣೆಯ ವೇಳೆ ಮುಖ್ಯ ನ್ಯಾಯಮೂರ್ತಿ (CJI) ಡಿ.ವೈ.ಚಂದ್ರಚೂಡ್ ಅವರು ʼʼದಂತವೈದ್ಯಕೀಯ ಕೋರ್ಸ್‌ಗಳನ್ನು ಪುನಃಸ್ಥಾಪಿಸುವ ರಾಷ್ಟ್ರೀಯ ದಂತ ಆಯೋಗದ (NDC) ಪ್ರಯತ್ನಗಳನ್ನು ನಿರಂಕುಶವೆಂದು ಭಾವಿಸಬಾರದು. ನ್ಯಾಯಾಲಯವು ಈ ಕೊನೆ ಹಂತದಲ್ಲಿ ಮಧ್ಯಪ್ರವೇಶಿಸುವುದು ಸೂಕ್ತವಲ್ಲ ಎಂದು ಹೇಳಿದರು.

ʼʼದಂತ ವೈದ್ಯಕೀಯ ಕೋರ್ಸ್‌ ಅನ್ನು ಕೋವಿಡ್ ಪೂರ್ವದ ಸ್ಥಿತಿಗೆ ತರಲು ರಾಷ್ಟ್ರೀಯ ದಂತ ಆಯೋಗ ಶ್ರಮಿಸುತ್ತಿದೆ. ಈ ಹಂತದಲ್ಲಿ ಹಸ್ತಕ್ಷೇಪ ಮಾಡುವುದು ಸೂಕ್ತವಲ್ಲ ಎಂದು ನಾವು ಭಾವಿಸುತ್ತೇವೆ. ಹೀಗಾಗಿ ಪ್ರಸ್ತುತ ವಿಷಯದಲ್ಲಿ ಮಧ್ಯಪ್ರವೇಶಿಸಲು ನಾವು ನಿರಾಕರಿಸುತ್ತೇವೆ” ಎಂದು ಹೇಳಿದ ಮುಖ್ಯ ನ್ಯಾಯಮೂರ್ತಿ ಡಿ.ವೈ.ಚಂದ್ರಚೂಡ್ ಅವರು ಪರೀಕ್ಷೆಯನ್ನು ಮುಂದೂಡಲು ನಿರಾಕರಿಸಿದರು.

ಎನ್‌ಡಿಎಸ್‌ ಹೇಳಿದ್ದೇನು?

ಮಾರ್ಚ್‌ 18ರಂದು ನಡೆಯಲಿರುವ ನೀಟ್‌ ಎಂಡಿಎಸ್‌ 2024 ಪರೀಕ್ಷೆಗಾಗಿ ಸುಮಾರು 28,000 ವಿದ್ಯಾರ್ಥಿಗಳು ಹೆಸರು ನೋಂದಾಯಿಸಿದ್ದು, ಇದಕ್ಕಾಗಿ ಸಿದ್ಧತೆ ನಡೆಸಿದ್ದಾರೆ. ಈ ಕೊನೆಯ ಕ್ಷಣದಲ್ಲಿ ಪರೀಕ್ಷೆ ಮುಂದೂಡಿದರೆ ಅವರಿಗೆ ನೋವಾಗುತ್ತದೆ. ಇದಲ್ಲದೆ ಕೇಂದ್ರ ಸರ್ಕಾರವು ಇಂಟರ್ನ್‌ಶಿಪ್‌ ಗಡುವನ್ನು ವಿಸ್ತರಿಸಿದೆ. ಇದರ ಪರಿಣಾಮವಾಗಿ 568 ವಿದ್ಯಾರ್ಥಿಗಳು ಪರೀಕ್ಷೆಗೆ ಅರ್ಜಿ ಸಲ್ಲಿಸಿದ್ದಾರೆ ಎಂದು ಎಂದು ಎನ್‌ಡಿಎಸ್‌ ಕೋರ್ಟ್‌ಗೆ ತಿಳಿಸಿತ್ತು.

ನೀಟ್ ಪಿಜಿ ಕೌನ್ಸೆಲಿಂಗ್‌ನ ವೇಳಾಪಟ್ಟಿ ಸಮಸ್ಯೆಗಳನ್ನು ಉಲ್ಲೇಖಿಸಿ ನೀಟ್ ಎಂಡಿಎಸ್ 2024 ಅನ್ನು ಜುಲೈಗೆ ಮುಂದೂಡಬೇಕೆಂದು ವೈದ್ಯರ ಸಂಘಟನೆಗಳು ಮತ್ತು ಹಲವು ವಿದ್ಯಾರ್ಥಿಗಳು ಕೋರ್ಟ್‌ ಮೊರೆ ಹೋಗಿದ್ದರು. ಪರೀಕ್ಷೆಯ ಬಗೆಗಿನ ಗೊಂದಲವು ವಿದ್ಯಾರ್ಥಿಗಳಿಗೆ ಸಮಸ್ಯೆ ತಂದೊಡ್ಡಿದ್ದು, ದಿನಾಂಕ ಬದಲಾಯಿಸಬೇಕು ಎಂದು ಅವರು ಹೇಳಿದ್ದರು.

ಪ್ರವೇಶ ಪತ್ರ ಡೌಲ್‌ಲೋಡ್‌ ಮಾಡುವ ವಿಧಾನ

ನ್ಯಾಷನಲ್ ಬೋರ್ಡ್ ಆಫ್ ಎಕ್ಸಾಮಿನೇಷನ್ಸ್ ಇನ್ ಮೆಡಿಕಲ್ ಸೈನ್ಸಸ್ (NBEMS) ನೀಟ್ ಎಂಡಿಎಸ್ 2024ರ ಪ್ರವೇಶ ಪತ್ರವನ್ನು ಶೀಘ್ರ ಬಿಡುಗಡೆ ಮಾಡಲಿದೆ. ನೀಟ್ ಎಂಡಿಎಸ್ ಪರೀಕ್ಷೆಗೆ ಹಾಜರಾಗುವ ಅಭ್ಯರ್ಥಿಗಳು ತಮ್ಮ ಹಾಲ್ ಟಿಕೆಟ್ ಅನ್ನು ಅಧಿಕೃತ ವೆಬ್‌ಸೈಟ್‌ natboard.edu.inನಲ್ಲಿ ಡೌನ್‌ಲೋಡ್‌ ಮಾಡಬಹುದು. ದೇಶಾದ್ಯಂತ ವಿವಿಧ ಕೇಂದ್ರಗಳಲ್ಲಿ ಪರೀಕ್ಷೆ ನಡೆಯಲಿದೆ.

ಇದನ್ನೂ ಓದಿ: ಕಾಶ್ಮೀರಿ ಕೂಲಿ ಕಾರ್ಮಿಕ ಉಮರ್‌ ಅಹ್ಮದ್ ನೀಟ್‌ ಪಾಸಾದ, ಕಣಿವೆ ಈಗ ಪ್ರತಿಭೆಗಳ ಬಣವೆ‌

2024-2025ರ ವಿವಿಧ ಎಂಡಿಎಸ್ ಕೋರ್ಸ್‌ಗಳ ಪ್ರವೇಶಕ್ಕಾಗಿ ನಡೆಯುವ ಅರ್ಹತಾ ಮತ್ತು ಶ್ರೇಯಾಂಕ ಪರೀಕ್ಷೆ ನೀಟ್-ಎಂಡಿಎಸ್ 2024. ಇದನ್ನು ನ್ಯಾಷನಲ್ ಬೋರ್ಡ್ ಆಫ್ ಎಕ್ಸಾಮಿನೇಷನ್ ಇನ್ ಮೆಡಿಕಲ್ ಸೈನ್ಸಸ್ ನಡೆಸುತ್ತದೆ. ಕಂಪ್ಯೂಟರ್ ಆಧಾರಿತ ಈ ಪರೀಕ್ಷೆಯನ್ನು ಮಾರ್ಚ್‌ 18ರ ಬೆಳಗ್ಗೆ 9ರಿಂದ ಮಧ್ಯಾಹ್ನ 12ರ ವರೆಗೆ ನಡೆಸಲಾಗುತ್ತದೆ. ತಪ್ಪು ಉತ್ತರಗಳಿಗೆ ನೆಗೆಟಿವ್‌ ಅಂಕಗಳಿವೆ. ಹೀಗಾಗಿ ಎಚ್ಚರಿಕೆಯಿಂದ ಉತ್ತರಿಸಬೇಕು ಎಂದು ಪ್ರಕಟಣೆ ತಿಳಿಸಿದೆ.

ಈ ಸಂಗತಿಯ ಕುರಿತು ನಿಮ್ಮ ಅನಿಸಿಕೆ ಏನು? ಕಾಮೆಂಟ್ ಮೂಲಕ ತಿಳಿಸಿ

ಕ್ಷಣ ಕ್ಷಣದ ಮಾಹಿತಿಗಾಗಿ Vistara News FaceBook ಪೇಜ್ ಫಾಲೋ ಮಾಡಿ
ಮಹತ್ವದ ಮಾಹಿತಿಗಾಗಿ ವಿಸ್ತಾರ ನ್ಯೂಸ್ ಆ್ಯಪ್ ಉಚಿತವಾಗಿ ಡೌನ್ ಲೋಡ್ ಮಾಡಿಕೊಳ್ಳಿ: Andriod App | IOS App
Continue Reading
Click to comment

Leave a Reply

Your email address will not be published. Required fields are marked *

ದೇಶ

NEET-UG: ನೀಟ್‌ ಪರೀಕ್ಷೆ ವೇಳೆ ವಂಚನೆ; 10 ಲಕ್ಷ ರೂ.ಗೆ ಬೇಡಿಕೆ ಇಟ್ಟ ಶಿಕ್ಷಕ ಸೇರಿ ಮೂವರ ವಿರುದ್ಧ ಬಿತ್ತು ಕೇಸು

NEET-UG: ನೀಟ್-ಯುಜಿ ಸ್ಪರ್ಧಾತ್ಮಕ ಪರೀಕ್ಷೆಗೆ ಹಾಜರಾದ ಆರು ಅಭ್ಯರ್ಥಿಗಳಿಂದ ತಲಾ 10 ಲಕ್ಷ ರೂ.ಗಳಿಗೆ ಬೇಡಿಕೆ ಇಟ್ಟು ಅವರನ್ನು ತೇರ್ಗಡೆ ಮಾಡುವುದಾಗಿ ಭರವಸೆ ನೀಡಿದ್ದ ಆರೋಪದ ಮೇಲೆ ಶಾಲಾ ಶಿಕ್ಷಕ ಮತ್ತು ಇತರ ಇಬ್ಬರ ವಿರುದ್ಧ ಕ್ರಿಮಿನಲ್ ಪ್ರಕರಣ ದಾಖಲಿಸಲಾಗಿದೆ. ಆರೋಪಿಗಳು ಮತ್ತು ಕೆಲವು ನೀಟ್-ಯುಜಿ ಆಕಾಂಕ್ಷಿಗಳ ನಡುವೆ ಒಪ್ಪಂದ ನಡೆದಿತ್ತು. ಅದರ ಪ್ರಕಾರ ಅಭ್ಯರ್ಥಿಗಳು ತಮಗೆ ಗೊತ್ತಿಲ್ಲದ ಪ್ರಶ್ನೆಗೆ ಉತ್ತರ ಬರೆಯದೆ ಹಾಗೆ ಖಾಲಿ ಬಿಡಬೇಕಿತ್ತು. ಪರೀಕ್ಷೆಯ ನಂತರ ಉತ್ತರ ಪತ್ರಿಕೆಯನ್ನು ಸಂಗ್ರಹಿಸಿ ಆ ಖಾಲಿ ಸ್ಥಳವನ್ನು ಭರ್ತಿ ಮಾಡುವುದಾಗಿ ಒಪ್ಪಂದ ನಡೆದಿತ್ತು ಎಂದು ಎಫ್‌ಐಆರ್‌ನಲ್ಲಿ ತಿಳಿಸಲಾಗಿದೆ. ಭೌತಶಾಸ್ತ್ರ ಶಿಕ್ಷಕ ತುಷಾರ್ ಭಟ್ ಮತ್ತು ಪರಶುರಾಮ್ ರಾಯ್, ಆರಿಫ್ ವೋರಾ ವಿರುದ್ಧ ಪ್ರಕರಣ ದಾಖಲಿಸಲಾಗಿದೆ.

VISTARANEWS.COM


on

NEET-UG
Koo

ಗಾಂಧಿನಗರ: ನೀಟ್-ಯುಜಿ (NEET-UG) ಸ್ಪರ್ಧಾತ್ಮಕ ಪರೀಕ್ಷೆಗೆ ಹಾಜರಾದ ಆರು ಅಭ್ಯರ್ಥಿಗಳಿಂದ ತಲಾ 10 ಲಕ್ಷ ರೂ.ಗಳಿಗೆ ಬೇಡಿಕೆ ಇಟ್ಟು ಅವರನ್ನು ತೇರ್ಗಡೆ ಮಾಡುವುದಾಗಿ ಭರವಸೆ ನೀಡಿದ್ದ ಆರೋಪದ ಮೇಲೆ ಶಾಲಾ ಶಿಕ್ಷಕ ಮತ್ತು ಇತರ ಇಬ್ಬರ ವಿರುದ್ಧ ಕ್ರಿಮಿನಲ್ ಪ್ರಕರಣ ದಾಖಲಿಸಲಾಗಿದೆ. ಗುಜರಾತ್‌ನ ಪಂಚಮಹಲ್ ಜಿಲ್ಲೆಯ ಗೋಧ್ರಾದಲ್ಲಿ ಈ ಘಟನೆ ನಡೆದಿದೆ ಎಂದು ಪೊಲೀಸರು ಗುರುವಾರ ತಿಳಿಸಿದ್ದಾರೆ.

ವೈದ್ಯಕೀಯ ಕಾಲೇಜುಗಳ ಪ್ರವೇಶಕ್ಕಾಗಿ ಭಾನುವಾರ (ಮೇ 5) ನೀಟ್-ಯುಜಿ ಪರೀಕ್ಷೆ ನಡೆಸಿತ್ತು. ಈ ವೇಳೆ ಗೋಧ್ರಾ ಶಾಲೆಯ ಪರೀಕ್ಷಾ ಕೇಂದ್ರದಲ್ಲಿ ನಕಲು ನಡೆದಿದೆ ಎಂಬ ಸುಳಿವು ಜಿಲ್ಲಾಧಿಕಾರಿಗೆ ದೊರೆತ ನಂತರ ತನಿಖೆ ನಡೆಸಲಾಗಿತ್ತು. ಈ ವೇಳೆ ವಂಚನೆಯ ಪ್ರಕರಣ ಬೆಳಕಿಗೆ ಬಂದಿದೆ.

ಆರೋಪಿಗಳು

ಸದ್ಯ ಭೌತಶಾಸ್ತ್ರ ಶಿಕ್ಷಕ ತುಷಾರ್ ಭಟ್ ಮತ್ತು ಪರಶುರಾಮ್ ರಾಯ್, ಆರಿಫ್ ವೋರಾ ವಿರುದ್ಧ ಪ್ರಕರಣ ದಾಖಲಿಸಲಾಗಿದೆ. ತುಷಾರ್ ಭಟ್‌ ಕಾರಿನಲ್ಲಿ 7 ಲಕ್ಷ ರೂ. ಪತ್ತೆಯಾಗಿದ್ದು ಅದನ್ನು ವಶಪಡಿಸಿಕೊಳ್ಳಲಾಗಿದೆ. ಇದು ಅಭ್ಯರ್ಥಿಯೊಬ್ಬರನ್ನು ಮೆರಿಟ್ ಪಟ್ಟಿಗೆ ಸೇರಿಸಲು ಸಹಾಯ ಮಾಡುವಂತೆ ವೋರಾ ಮುಂಗಡವಾಗಿ ಪಾವತಿಸಿದ ಮೊತ್ತ ಎಂದು ಪೊಲೀಸರು ತಿಳಿಸಿದ್ದಾರೆ.

ವಂಚನೆ ಹೇಗೆ?

ವಿಚಾರಣೆ ವೇಳೆ ವಂಚನೆಯ ಜಾಲದ ವಿವರ ಬೆಳಕಿಗೆ ಬಂದಿದೆ. ಆರೋಪಿಗಳು ಮತ್ತು ಕೆಲವು ನೀಟ್-ಯುಜಿ ಆಕಾಂಕ್ಷಿಗಳ ನಡುವೆ ಒಪ್ಪಂದ ನಡೆದಿತ್ತು. ಅದರ ಪ್ರಕಾರ ಅಭ್ಯರ್ಥಿಗಳು ತಮಗೆ ಗೊತ್ತಿಲ್ಲದ ಪ್ರಶ್ನೆಗೆ ಉತ್ತರ ಬರೆಯದೆ ಹಾಗೆ ಖಾಲಿ ಬಿಡಬೇಕಿತ್ತು. ಪರೀಕ್ಷೆಯ ನಂತರ ಉತ್ತರ ಪತ್ರಿಕೆಯನ್ನು ಸಂಗ್ರಹಿಸಿ ಆ ಖಾಲಿ ಸ್ಥಳವನ್ನು ಭರ್ತಿ ಮಾಡುವುದಾಗಿ ಒಪ್ಪಂದ ನಡೆದಿತ್ತು ಎಂದು ಎಫ್‌ಐಆರ್‌ನಲ್ಲಿ ತಿಳಿಸಲಾಗಿದೆ. ಜಿಲ್ಲಾ ಶಿಕ್ಷಣ ಅಧಿಕಾರಿಯ ದೂರಿನ ಮೇರೆಗೆ ಗೋಧ್ರಾ ತಾಲೂಕು ಪೊಲೀಸ್ ಠಾಣೆಯಲ್ಲಿ ಪ್ರಕರಣ ದಾಖಲಾಗಿದೆ.

ಜಯ್ ಜಲರಾಮ್ ಶಾಲೆಯಲ್ಲಿ ಶಿಕ್ಷಕರಾಗಿ ಕರ್ತವ್ಯ ನಿರ್ವಹಿಸುತ್ತಿರುವ ತುಷಾರ್ ಭಟ್ ನೀಟ್‌ ಕೇಂದ್ರದ ಉಪ ಅಧೀಕ್ಷಕರಾಗಿ ನೇಮಕಗೊಂಡಿದ್ದರು. ತನಿಖೆ ವೇಳೆ ಅವರ ಮೊಬೈಲ್‌ನಲ್ಲಿ ಸಾಕ್ಷಿ ದೊರೆತಿದೆ. ಪರಶುರಾಮ್ ರಾಯ್ ವ್ಯಾಟ್‌ಆ್ಯಪ್‌ ಮೂಲಕ ಕಳುಹಿಸಿದ 16 ಅಭ್ಯರ್ಥಿಗಳ ಪಟ್ಟಿ ಕಂಡು ಬಂದಿದೆ ಎಂದು ಪೊಲೀಸರು ವಿವರಿಸಿದ್ದಾರೆ. ಪಟ್ಟಿಯ ಬಗ್ಗೆ ಕೇಳಿದಾಗ ತುಷಾರ್‌ ಭಟ್‌, ಇವರು ತಮ್ಮ ಕೇಂದ್ರದಲ್ಲಿ ನೀಟ್ ಪರೀಕ್ಷೆ ಬರೆಯುವ ಅಭ್ಯರ್ಥಿಗಳು ಎಂದು ಹೇಳಿದ್ದಾರೆ. ಈ ಅಭ್ಯರ್ಥಿಗಳು ಬಿಟ್ಟಿರುವ ಪ್ರಶ್ನೆಗಳಿಗೆ ಉತ್ತರಿಸಲು ತಲಾ 10 ಲಕ್ಷ ರೂ.ಗಳ ಬೇಡಿಕೆ ಇಟ್ಟಿದ್ದಾಗಿ ಅವರು ಒಪ್ಪಿಕೊಂಡಿದ್ದಾರೆ ಎಂದು ಜಿಲ್ಲಾ ಶಿಕ್ಷಣ ಅಧಿಕಾರಿ ಕಿರಿತ್ ಪಟೇಲ್ ತಿಳಿಸಿದ್ದಾರೆ.

ಸದ್ಯ ತುಷಾರ್‌ ಭಟ್‌ ಅವರ ಮೊಬೈಲ್‌ ಫೋನ್‌, ನಗದು ಮತ್ತು ಕಾರನ್ನು ವಶಕ್ಕೆ ಪಡೆಯಲಾಗಿದ್ದು, ಈ ಬಗ್ಗೆ ಹೆಚ್ಚಿನ ತನಿಖೆ ನಡೆಯುತ್ತಿದೆ. ಮೂವರು ಆರೋಪಿಗಳ ವಿರುದ್ಧ ವಂಚನೆ ಮತ್ತು ಕ್ರಿಮಿನಲ್ ಪಿತೂರಿ ಪ್ರಕರಣ ದಾಖಲಿಸಲಾಗಿದೆ ಎಂದು ಗೋಧ್ರಾ ತಾಲೂಕು ಪೊಲೀಸ್ ಠಾಣೆಯ ಅಧಿಕಾರಿಯೊಬ್ಬರು ಹೇಳಿದ್ದಾರೆ.

ಇದನ್ನೂ ಓದಿ: Viral News: ತಮ್ಮನ ಬದಲು ನೀಟ್‌ ಪರೀಕ್ಷೆ ಬರೆದ ಅಣ್ಣ; ಕೊನೆಯ ಕ್ಷಣದಲ್ಲಿ ಸಹೋದರರ ಕಳ್ಳಾಟ ಬಯಲಾಗಿದ್ದು ಹೇಗೆ?

Continue Reading

ಉತ್ತರ ಕನ್ನಡ

SSLC Result 2024: ಎಸ್‌ಎಸ್‌ಎಲ್‌ಸಿ ಪರೀಕ್ಷೆಯಲ್ಲಿ ಸಾರ್ವಭೌಮ ಗುರುಕುಲಕ್ಕೆ ಶೇ.100 ಫಲಿತಾಂಶ

SSLC Result 2024: ಗೋಕರ್ಣದ ವಿಷ್ಣುಗುಪ್ತ ವಿಶ್ವವಿದ್ಯಾಪೀಠದ ಸಾರ್ವಭೌಮ ಗುರುಕುಲದ ವಿದ್ಯಾರ್ಥಿಗಳು ಎಸ್ಸೆಸ್ಸೆಲ್ಸಿ ಪರೀಕ್ಷೆಯಲ್ಲಿ ಸತತ ಮೂರನೇ ವರ್ಷ ಶೇಕಡಾ 100 ಫಲಿತಾಂಶ ಸಾಧಿಸಿದ್ದಾರೆ. ಸಾರ್ವಭೌಮ ಗುರುಕುಲ ಪಾರಂಪರಿಕ ಮತ್ತು ನವಯುಗದ ಸಮನ್ವಯ ಶಿಕ್ಷಣ ನೀಡುವ ದೇಶದ ಏಕೈಕ ಸಂಸ್ಥೆಯಾಗಿದ್ದು, ಪಾರಂಪರಿಕ ವಿಭಾಗದಲ್ಲಿ ಸಾಧನೆ ಮಾಡುವ ಜತೆಜತೆಗೆ ನವಯುಗ ಶಿಕ್ಷಣದಲ್ಲೂ ಯಾವುದೇ ಶಿಕ್ಷಣ ಸಂಸ್ಥೆಗಳ ವಿದ್ಯಾರ್ಥಿಗಳಿಗಿಂತ ನಾವು ಕಡಿಮೆ ಇಲ್ಲ ಎನ್ನುವುದನ್ನು ಈ ಸಾಧನೆ ತೋರಿಸಿಕೊಟ್ಟಿದೆ ಎಂದು ಮಾರ್ಗದರ್ಶಕರಾದ ಶ್ರೀಮಜ್ಜಗದ್ಗುರು ಶಂಕರಾಚಾರ್ಯ ಶ್ರೀರಾಘವೇಶ್ವರಭಾರತೀ ಮಹಾಸ್ವಾಮೀಜಿ ವಿದ್ಯಾರ್ಥಿಗಳ ಸಾಧನೆಯನ್ನು ಶ್ಲಾಘಿಸಿದ್ದಾರೆ.

VISTARANEWS.COM


on

Koo

ಗೋಕರ್ಣ: ವಿಷ್ಣುಗುಪ್ತ ವಿಶ್ವವಿದ್ಯಾಪೀಠದ ಸಾರ್ವಭೌಮ ಗುರುಕುಲದ ವಿದ್ಯಾರ್ಥಿಗಳು ಎಸ್ಸೆಸ್ಸೆಲ್ಸಿ ಪರೀಕ್ಷೆಯಲ್ಲಿ (SSLC Result 2024) ಸತತ ಮೂರನೇ ವರ್ಷ ಶೇಕಡಾ 100 ಫಲಿತಾಂಶ ಸಾಧಿಸಿದ್ದಾರೆ.

ಸಾರ್ವಭೌಮ ಗುರುಕುಲ ಪಾರಂಪರಿಕ ಮತ್ತು ನವಯುಗದ ಸಮನ್ವಯ ಶಿಕ್ಷಣ ನೀಡುವ ದೇಶದ ಏಕೈಕ ಸಂಸ್ಥೆಯಾಗಿದ್ದು, ಪಾರಂಪರಿಕ ವಿಭಾಗದಲ್ಲಿ ಸಾಧನೆ ಮಾಡುವ ಜತೆಜತೆಗೆ ನವಯುಗ ಶಿಕ್ಷಣದಲ್ಲೂ ಯಾವುದೇ ಶಿಕ್ಷಣ ಸಂಸ್ಥೆಗಳ ವಿದ್ಯಾರ್ಥಿಗಳಿಗಿಂತ ನಾವು ಕಡಿಮೆ ಇಲ್ಲ ಎನ್ನುವುದನ್ನು ಈ ಸಾಧನೆ ತೋರಿಸಿಕೊಟ್ಟಿದೆ ಎಂದು ಮಾರ್ಗದರ್ಶಕರಾದ ಶ್ರೀಮಜ್ಜಗದ್ಗುರು ಶಂಕರಾಚಾರ್ಯ ಶ್ರೀ ರಾಘವೇಶ್ವರಭಾರತೀ ಮಹಾಸ್ವಾಮೀಜಿ ವಿದ್ಯಾರ್ಥಿಗಳ ಸಾಧನೆಯನ್ನು ಕೊಂಡಾಡಿದ್ದಾರೆ.

ಇದನ್ನೂ ಓದಿ: SSLC Result 2024: ಎಸ್‌ಎಸ್‌ಎಲ್‌ಸಿ ಪರೀಕ್ಷೆಯಲ್ಲಿ ಮಗನ ಜತೆ ತಾಯಿಯೂ ಪಾಸ್!

ವಿವಿವಿ ಅಂಕಗಳಿಕೆ ಶಿಕ್ಷಣಕ್ಕೆ ಒತ್ತು ನೀಡದೇ ವಿದ್ಯಾರ್ಥಿಗಳ ಸಮಗ್ರ ವಿಕಾಸಕ್ಕೆ ಒತ್ತು ನೀಡುತ್ತದೆ. ಆದಾಗ್ಯೂ ಅಂಕ ಗಳಿಕೆಯಲ್ಲೂ ನಮ್ಮ ವಿದ್ಯಾರ್ಥಿಗಳು ಮುಂದಿರುವುದು ಸಂಸ್ಥೆಯ ಶ್ರೇಷ್ಠತೆಗೆ ಹಿಡಿದ ಕೈಗನ್ನಡಿ. ದೇಶದ ಭಾವಿ ಪ್ರಜೆಗಳ ಭದ್ರ ಭವಿಷ್ಯದ ಅಡಿಪಾಯ ಇದಾಗಿದ್ದು, ವಿದ್ಯಾರ್ಥಿಗಳ ಭವಿಷ್ಯ ಉಜ್ವಲವಾಗಿ ಎಂದು ಅವರು ಆಶೀರ್ವದಿಸಿದ್ದಾರೆ.

ಪರೀಕ್ಷೆ ತೆಗೆದುಕೊಂಡ 33 ವಿದ್ಯಾರ್ಥಿಗಳ ಪೈಕಿ 19 ಮಂದಿ ಅತ್ಯುನ್ನತ ದರ್ಜೆಯಲ್ಲಿ 13 ಮಂದಿ ಪ್ರಥಮ ಹಾಗೂ ಒಬ್ಬ ವಿದ್ಯಾರ್ಥಿ ದ್ವಿತೀಯ ದರ್ಜೆಯಲ್ಲಿ ಉತ್ತೀರ್ಣರಾಗಿದ್ದಾರೆ ಎಂದು ಮುಖ್ಯ ಶಿಕ್ಷಕಿ ಸೌಭಾಗ್ಯ ಭಟ್ಟ ಪ್ರಕಟಣೆಯಲ್ಲಿ ಹೇಳಿದ್ದಾರೆ.

ಪನ್ನಗ ಎಸ್. ಭಟ್ 613 ಅಂಕಗಳನ್ನು ಗಳಿಸಿ ಪ್ರಥಮ ಸ್ಥಾನ ಪಡೆದಿದ್ದರೆ, 603 ಅಂಕ ಗಳಿಸಿದ ರಾಮಚಂದ್ರ ಉಪಾಧ್ಯ ಎರಡನೇ ಸ್ಥಾನ ಗಳಿಸಿದ್ದಾರೆ. ತಲಾ 600 ಅಂಕಗಳನ್ನು ಪಡೆದ ಎನ್. ತನ್ವಿ ಗೌರಿ ಮತ್ತು ಸುಮುಖ ಹೆಗಡೆ ಜಿ ಮೂರನೇ ಸ್ಥಾನ ಹಂಚಿಕೊಂಡಿದ್ದಾರೆ.

ಇದನ್ನೂ ಓದಿ: Karnataka Weather : ಕೊಡಗು, ಕೊಪ್ಪಳ ಸೇರಿ ಹಲವೆಡೆ ಅಬ್ಬರಿಸುತ್ತಿರುವ ಗಾಳಿ- ಮಳೆ; ನಾಳೆಗೂ ವಾರ್ನಿಂಗ್‌

ಅತ್ಯುತ್ತಮ ಸಾಧನೆಗೆ ಕಾರಣವಾಗಿರುವ ವಿದ್ಯಾರ್ಥಿ ಹಾಗೂ ಶಿಕ್ಷಕರನ್ನು ಶಾಲಾ ಆಡಳಿತ ಮಂಡಳಿ ಅಧ್ಯಕ್ಷ ಅರುಣ್ ಹೆಗಡೆ, ವಿವಿವಿ ಗೌರವಾಧ್ಯಕ್ಷ ಡಿ.ಡಿ.ಶರ್ಮಾ, ಪಾರಂಪರಿಕ ವಿಭಾಗದ ವರಿಷ್ಠಾಚಾರ್ಯ ಸತ್ಯನಾರಾಯಣ ಶರ್ಮಾ ಮತ್ತಿತರರು ಅಭಿನಂದಿಸಿದ್ದಾರೆ.

Continue Reading

ಉತ್ತರ ಕನ್ನಡ

SSLC Result 2024: ಯಲ್ಲಾಪುರದ ವಿಶ್ವದರ್ಶನ ಶಿಕ್ಷಣ ಸಮೂಹ ಪ್ರೌಢಶಾಲೆಗಳ ಉತ್ತಮ ಸಾಧನೆ

SSLC Result 2024: 2023-24 ನೇ ಸಾಲಿನ ರಾಜ್ಯ ಎಸ್‌ಎಸ್‌ಎಲ್‌ಸಿ ಪರೀಕ್ಷಾ ಫಲಿತಾಂಶ ಪ್ರಕಟಗೊಂಡಿದ್ದು ಯಲ್ಲಾಪುರ ಪಟ್ಟಣದ ವಿಶ್ವದರ್ಶನ ಶಿಕ್ಷಣ ಸಮೂಹದ ಮೂರು ಪ್ರೌಢಶಾಲೆಗಳು ಉತ್ತಮ ಸಾಧನೆ ತೋರಿದೆ. ವಿಶ್ವದರ್ಶನ ಆಂಗ್ಲ ಮಾಧ್ಯಮ ಪ್ರೌಢಶಾಲೆಯು ಶೇ.98.48 ಫಲಿತಾಂಶ ದಾಖಲಿಸಿದ್ದು, ಶಾಲೆಯ ವಿದ್ಯಾರ್ಥಿನಿ ಪ್ರಣತಿ ವಿ. ಮೆಣಸುಮನೆ 625ಕ್ಕೆ 620 ಅಂಕ ಗಳಿಸಿ ರಾಜ್ಯಕ್ಕೆ 6ನೇ ಸ್ಥಾನ ಹಾಗೂ ತಾಲೂಕಿಗೆ ದ್ವಿತೀಯ ಸ್ಥಾನ ಪಡೆದಿದ್ದು ವಿಶೇಷವಾಗಿದೆ. ಅದೇ ರೀತಿ ಇಡಗುಂದಿಯ ವಿಶ್ವದರ್ಶನ ಕನ್ನಡ ಮಾಧ್ಯಮ ಪ್ರೌಢಶಾಲೆಯಲ್ಲಿ ಪರೀಕ್ಷೆಗೆ ಹಾಜರಾದ ಎಲ್ಲ ವಿದ್ಯಾರ್ಥಿಗಳೂ ಉತ್ತೀರ್ಣಗೊಂಡು ನೂರಕ್ಕೆ ನೂರು ಫಲಿತಾಂಶ ದಾಖಲಿಸಿ ಗಮನ ಸೆಳೆದಿದ್ದಾರೆ. ಯಲ್ಲಾಪುರದ ವಿಶ್ವದರ್ಶನ ಕನ್ನಡ ಮಾಧ್ಯಮ ಪ್ರೌಢಶಾಲೆಯುೂ ಕೂಡಾ ಉತ್ತಮ ಸಾಧನೆ ಮಾಡಿದ್ದು ಶೇ.98.24 ಫಲಿತಾಂಶ ಪಡೆದಿದೆ.

VISTARANEWS.COM


on

Yallapur Vishwadarshana Group of institutions performed well in SSLC Result 2024
Koo

ಯಲ್ಲಾಪುರ: 2023-24ನೇ ಸಾಲಿನ ರಾಜ್ಯ ಎಸ್‌ಎಸ್‌ಎಲ್‌ಸಿ ಪರೀಕ್ಷಾ ಫಲಿತಾಂಶ (SSLC Result 2024) ಪ್ರಕಟಗೊಂಡಿದ್ದು, ಪಟ್ಟಣದ ವಿಶ್ವದರ್ಶನ ಶಿಕ್ಷಣ ಸಮೂಹದ ಮೂರು ಪ್ರೌಢಶಾಲೆಗಳು ಉತ್ತಮ ಸಾಧನೆ ತೋರಿವೆ.

ವಿಶ್ವದರ್ಶನ ಆಂಗ್ಲ ಮಾಧ್ಯಮ ಪ್ರೌಢಶಾಲೆಯು ಶೇ.98.48 ಫಲಿತಾಂಶ ದಾಖಲಿಸಿದ್ದು, ಶಾಲೆಯ ವಿದ್ಯಾರ್ಥಿನಿ ಪ್ರಣತಿ ವಿ. ಮೆಣಸುಮನೆ 625ಕ್ಕೆ 620 ಅಂಕ ಗಳಿಸಿ ರಾಜ್ಯಕ್ಕೆ 6ನೇ ಸ್ಥಾನ ಹಾಗೂ ತಾಲೂಕಿಗೆ ದ್ವಿತೀಯ ಸ್ಥಾನ ಪಡೆದಿದ್ದಾಳೆ. ಅದೇ ರೀತಿ ಇಡಗುಂದಿಯ ವಿಶ್ವದರ್ಶನ ಕನ್ನಡ ಮಾಧ್ಯಮ ಪ್ರೌಢಶಾಲೆಯಲ್ಲಿ ಪರೀಕ್ಷೆಗೆ ಹಾಜರಾದ ಎಲ್ಲ ವಿದ್ಯಾರ್ಥಿಗಳೂ ಉತ್ತೀರ್ಣಗೊಂಡು ನೂರಕ್ಕೆ ನೂರು ಫಲಿತಾಂಶ ದಾಖಲಿಸಿ ಗಮನ ಸೆಳೆದಿದ್ದಾರೆ. ಪಟ್ಟಣದ ವಿಶ್ವದರ್ಶನ ಕನ್ನಡ ಮಾಧ್ಯಮ ಪ್ರೌಢಶಾಲೆಯುೂ ಕೂಡ ಉತ್ತಮ ಸಾಧನೆ ಮಾಡಿದ್ದು, ಶೇ.98.24 ಫಲಿತಾಂಶ ಪಡೆದಿದೆ.

ಇದನ್ನೂ ಓದಿ: Olive Oil Benefits: ಆಲಿವ್‌ ಎಣ್ಣೆ ಕೇವಲ ಅಡುಗೆಗಲ್ಲ, ಮುಖದ ಚರ್ಮ ಹಾಗೂ ಕೂದಲ ಸೌಂದರ್ಯಕ್ಕೂ ಬೇಕು!

ಈ ಕುರಿತು ಸಂಸ್ಥೆಯ ಅಧ್ಯಕ್ಷ ಹರಿಪ್ರಕಾಶ್‌ ಕೋಣೆಮನೆ ಅವರು ಸಂತಸ ವ್ಯಕ್ತಪಡಿಸಿದ್ದು, ಎಲ್ಲ ವಿದ್ಯಾರ್ಥಿಗಳಿಗೆ ಶುಭ ಹಾರೈಸಿದ್ದಾರೆ. ವಿಶ್ವದರ್ಶನ ಶಿಕ್ಷಣ ಸಮೂಹವು ನಿರಂತರವಾಗಿ ಗುಣಾತ್ಮಕ ಶಿಕ್ಷಣ ನೀಡುವಲ್ಲಿ ಮುಂಚೂಣಿಯಲ್ಲಿ ಸಾಗುತ್ತಿದೆ. ನಮ್ಮ ಶಿಕ್ಷಣ ಸಂಸ್ಥೆಯಲ್ಲಿ ಉತ್ತಮವಾದ ಪದವಿಪೂರ್ವ ಕಾಲೇಜು ಇದ್ದು, ಇಲ್ಲಿ ವಿಜ್ಞಾನ ಮತ್ತು ವಾಣಿಜ್ಯ ವಿಭಾಗದಲ್ಲಿ ಗುಣಮಟ್ಟದ ಶಿಕ್ಷಣ ಪಡೆಯಬಹುದಾಗಿದೆ. ಹತ್ತನೇ ತರಗತಿ ಪೂರ್ಣಗೊಳಿಸಿದ ವಿದ್ಯಾರ್ಥಿಗಳು ಸ್ವಂತ ಊರಿನಲ್ಲಿಯೇ ಮುಂದಿನ ಶಿಕ್ಷಣಕ್ಕಾಗಿ ಇದರ ಸದುಪಯೋಗವನ್ನು ಪಡೆದುಕೊಳ್ಳಬಹುದು ಎಂದು ತಿಳಿಸಿದ್ದಾರೆ.

ವಿಶ್ವದರ್ಶನ ಆಂಗ್ಲ ಮಾಧ್ಯಮ ಪ್ರೌಢಶಾಲೆ: ಶೇ.98.48 ಫಲಿತಾಂಶ

ಪ್ರಣತಿ ವಿ. ಮೆಣಸುಮನೆ 625ಕ್ಕೆ 620 ಅಂಕ ಗಳಿಸಿ ಶೇ. 99.20 ಫಲಿತಾಂಶದೊಂದಿಗೆ ರಾಜ್ಯಕ್ಕೆ 6ನೇ ಸ್ಥಾನ, ಶಾಲೆಗೆ ಪ್ರಥಮ ಸ್ಥಾನ, ಸಿಂಚನಾ ಎಸ್. ಭಟ್ಟ 615 ಅಂಕ ಗಳಿಸಿ ಶೇ.98.40 ಫಲಿತಾಂಶದೊಂದಿಗೆ ದ್ವಿತೀಯ ಸ್ಥಾನ, ತೇಜಸ್ ಎಸ್. ಹೆಗಡೆ 609 ಅಂಕ ಗಳಿಸಿ ಶೇ.97.44 ಫಲಿತಾಂಶದೊಂದಿಗೆ ತೃತೀಯ ಸ್ಥಾನ ಗಳಿಸಿದ್ದಾರೆ. ಪರೀಕ್ಷೆಗೆ ಹಾಜರಾದ ಒಟ್ಟು 66 ವಿದ್ಯಾರ್ಥಿಗಳಲ್ಲಿ 33 ಡಿಸ್ಟಿಂಕ್ಷನ್‌ನಲ್ಲಿ, 28 ವಿದ್ಯಾರ್ಥಿಗಳು ಪ್ರಥಮ ದರ್ಜೆ, 4 ವಿದ್ಯಾರ್ಥಿಗಳು ದ್ವಿತೀಯ ದರ್ಜೆಯಲ್ಲಿ ಉತ್ತೀರ್ಣರಾಗಿದ್ದಾರೆ.

ವಿಶ್ವದರ್ಶನ ಪ್ರೌಢಶಾಲೆ ಇಡಗುಂದಿ: ಶೇ. 100% ಫಲಿತಾಂಶ ಸಾಧನೆ

ತಾಲೂಕಿನ ಇಡಗುಂದಿಯಲ್ಲಿರುವ ವಿಶ್ವದರ್ಶನ ಪ್ರೌಢಶಾಲೆಯು ಎಂಟನೇ ಬಾರಿಗೆ ನೂರಕ್ಕೆ ನೂರು ಸಾಧನೆ ಮಾಡಿದೆ. ಪರೀಕ್ಷೆಗೆ ಕುಳಿತ 35 ವಿದ್ಯಾರ್ಥಿಗಳಲ್ಲಿ 9 ವಿದ್ಯಾರ್ಥಿಗಳು ಡಿಸ್ಟಿಂಕ್ಷನ್, 22 ವಿದ್ಯಾರ್ಥಿಗಳು ಪ್ರಥಮ ದರ್ಜೆಯಲ್ಲಿ ಹಾಗೂ 3 ವಿದ್ಯಾರ್ಥಿಗಳು ದ್ವಿತೀಯ ದರ್ಜೆಯಲ್ಲಿ ಉತ್ತೀರ್ಣರಾಗಿದ್ದಾರೆ.
ಗಣೇಶ ಶಾಂತಾರಾಮ ದೇಸಾಯಿ 587 (93.92%) ಪ್ರಥಮ ಸ್ಥಾನ, ನಂದಿತಾ ಮಹೇಶ ತಾಮ್ಸೆ 583 (93.28%) ದ್ವಿತೀಯ ಸ್ಥಾನ ಹಾಗೂ ಸುಬ್ರಹ್ಮಣ್ಯ ನಾರಾಯಣ ಭಟ್ಟ 571 (91.36%) ತೃತೀಯ ಸ್ಥಾನವನ್ನು ಗಳಿಸಿದ್ದಾರೆ.

ವಿಶ್ವದರ್ಶನ ಕನ್ನಡ ಮಾಧ್ಯಮ ಪ್ರೌಢಶಾಲೆ, ಯಲ್ಲಾಪುರ: ಶೇ. 98.24 ಫಲಿತಾಂಶ

ಅನನ್ಯ ನಾಗೇಶ ಹೆಗಡೆ 579 ಅಂಕ ಗಳಿಸಿ ಪ್ರಥಮ ಸ್ಥಾನ, ವೇದಶ್ರೀ ವೆಂಕಟರಮಣ ಭಟ್ಟ 570 ಅಂಕ ಗಳಿಸಿ ದ್ವಿತೀಯ ಸ್ಥಾನ, ಪವನ್ ಚಂದ್ರಕಾಂತ ಮರಾಠಿ 563 ಅಂಕ ಗಳಿಸಿ ತೃತೀಯ ಸ್ಥಾನ ಪಡೆದಿದ್ದಾರೆ.

ಇದನ್ನೂ ಓದಿ: Sensex Crash : ಷೇರು ಮಾರುಕಟ್ಟೆಯಲ್ಲಿ ಭಾರೀ ಕುಸಿತ, ಸೆನ್ಸೆಕ್ಸ್​ 1100 ಅಂಕಗಳಷ್ಟು ಪತನ

ಒಟ್ಟು 57 ವಿದ್ಯಾರ್ಥಿಗಳಲ್ಲಿ 10 ವಿಧ್ಯಾರ್ಥಿಗಳು ಡಿಸ್ಟಿಂಕ್ಷನ್ 33 ವಿಧ್ಯಾರ್ಥಿಗಳು ಪ್ರಥಮ ದರ್ಜೆಯಲ್ಲಿ, 10 ವಿದ್ಯಾರ್ಥಿಗಳು ದ್ವಿತೀಯ ದರ್ಜೆಯಲ್ಲಿ 3 ವಿದ್ಯಾರ್ಥಿಗಳು ತೃತೀಯ ದರ್ಜೆಯಲ್ಲಿ ಉತ್ತೀರ್ಣರಾಗಿದ್ದಾರೆ.

Continue Reading

ಕರ್ನಾಟಕ

SSLC Result 2024: ಎಸ್‌ಎಸ್‌ಎಲ್‌ಸಿ ಪರೀಕ್ಷೆಯಲ್ಲಿ ಮಗನ ಜತೆ ತಾಯಿಯೂ ಪಾಸ್!

SSLC Result 2024: ರಾಜ್ಯಾದ್ಯಂತ ಎಸ್‌ಎಸ್‌ಎಲ್‌ಸಿ ಪರೀಕ್ಷೆಯ ಫಲಿತಾಂಶ (SSLC Result 2024) ಪ್ರಕಟಗೊಂಡಿದ್ದು, ಹಾಸನ ಜಿಲ್ಲೆಯಲ್ಲಿ ಅಪರೂಪದ ಪ್ರಸಂಗ ನಡೆದಿದೆ. ಎಸ್‌ಎಸ್‌‌ಎಲ್‌ಸಿ ಪರೀಕ್ಷೆಯಲ್ಲಿ ಮಗನ ಜತೆ ತಾಯಿಯೂ ಪಾಸ್ ಆಗಿದ್ದಾರೆ. ಸಕಲೇಶಪುರ ತಾಲೂಕಿನ ಚಿನ್ನಳ್ಳಿ ಗ್ರಾಮದಲ್ಲಿ ಎರಡನೇ ಬಾರಿ ಎಸ್‌ಎಸ್‌ಎಲ್‌ಸಿ ಪರೀಕ್ಷೆ ಬರೆದಿದ್ದ 38 ವರ್ಷದ ಜ್ಯೋತಿ.ಪಿ.ಆರ್. ಉತ್ತೀರ್ಣರಾಗಿದ್ದಾರೆ.

VISTARANEWS.COM


on

Mother passed SSLC exam with her son in Hassan
Koo

ಹಾಸನ: ರಾಜ್ಯಾದ್ಯಂತ ಎಸ್‌ಎಸ್‌ಎಲ್‌ಸಿ ಪರೀಕ್ಷೆಯ ಫಲಿತಾಂಶ (SSLC Result 2024) ಪ್ರಕಟಗೊಂಡಿದ್ದು, ಹಾಸನ ಜಿಲ್ಲೆಯಲ್ಲಿ ಅಪರೂಪದ ಪ್ರಸಂಗ ನಡೆದಿದೆ. ಎಸ್‌ಎಸ್‌‌ಎಲ್‌ಸಿ ಪರೀಕ್ಷೆಯಲ್ಲಿ ಮಗನ ಜತೆ ತಾಯಿಯೂ ಪಾಸ್ ಆಗಿದ್ದಾರೆ. ಸಕಲೇಶಪುರ ತಾಲೂಕಿನ ಚಿನ್ನಳ್ಳಿ ಗ್ರಾಮದಲ್ಲಿ ಎರಡನೇ ಬಾರಿ ಎಸ್‌ಎಸ್‌ಎಲ್‌ಸಿ ಪರೀಕ್ಷೆ ಬರೆದಿದ್ದ 38 ವರ್ಷದ ಜ್ಯೋತಿ ಪಿ.ಆರ್. ಉತ್ತೀರ್ಣರಾಗಿದ್ದಾರೆ.

ಇದನ್ನೂ ಓದಿ: SSLC Result 2024: ಎಸ್‌ಎಸ್‌ಎಲ್‌ಸಿ ‌ಉತ್ತರ ಪತ್ರಿಕೆ ಮರು ಮೌಲ್ಯಮಾಪನ, ಮರುಎಣಿಕೆಗೆ ಅರ್ಜಿ ಸಲ್ಲಿಸಲು ಆನ್‌ಲೈನ್‌ನಲ್ಲಷ್ಟೆ ಅವಕಾಶ

ತಾಯಿ-ಮಗ ಪಾಸ್‌

ಸಕಲೇಶಪುರ ತಾಲೂಕಿನ ಬಾಳ್ಳುಪೇಟೆಯ ಸಿದ್ದಣ್ಯಯ್ಯ ಹೈಸ್ಕೂಲ್‍ನಲ್ಲಿ ಮಗ ನಿತಿನ್ ಸಿ.ಬಿ. ಜತೆ ತಾಯಿ ಜ್ಯೋತಿ ಪಿ.ಆರ್. ಎಸ್‍ಎಸ್‍ಎಲ್‍ಸಿ ಪರೀಕ್ಷೆ ಬರೆದಿದ್ದರು. 250 ಅಂಕ ಪಡೆದು ಜ್ಯೋತಿ ಪಿ.ಆರ್. ಉತ್ತಿರ್ಣರಾಗಿದ್ದಾರೆ. ನಿತಿನ್‌ ಸಿ.ಬಿ. 582 ಅಂಕ ಪಡೆದಿದ್ದಾರೆ. ಬಾಳ್ಳುಪೇಟೆಯಲ್ಲಿರುವ ವಿವೇಕ ಕಾನ್ವೆಂಟ್‍ನಲ್ಲಿ ನಿತಿನ್ ಸಿ.ಬಿ. ಓದುತ್ತಿದ್ದಾರೆ.

ಕುಟುಂಬದಲ್ಲಿ ಮನೆ ಮಾಡಿದ ಸಂಭ್ರಮ

ಎಸ್‌ಎಸ್‌ಎಲ್‌ಸಿ ಪರೀಕ್ಷೆಯಲ್ಲಿ ಮಗನ ಜತೆ ತಾಯಿಯೂ ಉತ್ತೀರ್ಣರಾಗಿದ್ದಕ್ಕೆ ಕುಟುಂಬದಲ್ಲಿ ಸಂಭ್ರಮ ಮನೆ ಮಾಡಿದೆ.

SSLC Result 2024: ಎಸ್‌ಎಸ್‌ಎಲ್‌ಸಿ ‌ಉತ್ತರ ಪತ್ರಿಕೆ ಮರು ಮೌಲ್ಯಮಾಪನ, ಮರುಎಣಿಕೆಗೆ ಅರ್ಜಿ ಸಲ್ಲಿಸಲು ಆನ್‌ಲೈನ್‌ನಲ್ಲಷ್ಟೆ ಅವಕಾಶ

ರಾಜ್ಯಾದ್ಯಂತ ನಡೆದ ಎಸ್‌ಎಸ್‌ಎಲ್‌ಸಿ ಪರೀಕ್ಷೆಯ (SSLC Result 2024) ಫಲಿತಾಂಶವು ಮೇ 9ರಂದು ಪ್ರಕಟಿಸಲಾಗಿದೆ. ಇದೀಗ ಪರೀಕ್ಷೆಯ ಉತ್ತರ ಪತ್ರಿಕೆಗಳ ಪ್ರತಿಗಳನ್ನು ವಿದ್ಯಾರ್ಥಿಗಳು ಪಡೆಯಬಹುದಾಗಿದೆ. ಸ್ಕ್ಯಾನ್‌ ಪ್ರತಿ, ಮರು ಎಣಿಕೆ ಮತ್ತು ಮರುಮೌಲ್ಯಮಾಪನಕ್ಕೆ ಮಂಡಳಿಯ ವೆಬ್‌ಸೈಟ್‌ ಮೂಲಕ ಅರ್ಜಿಯನ್ನು ಸಲ್ಲಿಸಬಹುದಾಗಿದೆ.

ಇದನ್ನೂ ಓದಿ: Karnataka Weather : ಕೊಡಗು, ಕೊಪ್ಪಳ ಸೇರಿ ಹಲವೆಡೆ ಅಬ್ಬರಿಸುತ್ತಿರುವ ಗಾಳಿ- ಮಳೆ; ನಾಳೆಗೂ ವಾರ್ನಿಂಗ್‌

ಮೇ 9ರಿಂದ 16ರವರೆಗೆ ಉತ್ತರ ಪತ್ರಿಕೆಗಳ ಸ್ಕ್ಯಾನ್‌ ಪ್ರತಿಯನ್ನು ಪಡೆಯಲು ಆನ್‌ಲೈನ್‌ ಮೂಲಕ ಅರ್ಜಿ ಸಲ್ಲಿಸಬಹುದಾಗಿದೆ. ಉತ್ತರ ಪತ್ರಿಕೆಗಳ ಮರುಎಣಿಕೆಗೆ ಮತ್ತು ಮರು ಮೌಲ್ಯಮಾಪನಕ್ಕೆ ಆನ್‌ಲೈನ್‌ ಮೂಲಕ ಅರ್ಜಿ ಸಲ್ಲಿಸಬಹುದು. ಮೇ 13ರಿಂದ 22ವರೆಗೆ ಅರ್ಜಿ ಸಲ್ಲಿಸಬಹುದು ಜತೆಗೆ ಶುಲ್ಕವನ್ನು ಪಾವತಿಬಹುದಾಗಿದೆ.

ಇನ್ನೂ ನೇರವಾಗಿ ಮರು ಎಣಿಕೆಗಾಗಿ ಭೌತಿಕವಾಗಿ ಅರ್ಜಿ ಸಲ್ಲಿಸುವಂತಿಲ್ಲ. ಬದಲಿಗೆ ಆನ್‌ಲೈನ್‌ ಮೂಲಕವೇ ಅರ್ಜಿಯನ್ನು ಸಲ್ಲಿಸಬೇಕಿದೆ. ಮರು ಎಣಿಕೆ ಬಯಸುವ ವಿದ್ಯಾರ್ಥಿಗಳು ಕಡ್ಡಾಯವಾಗಿ ಸಂಬಂಧಪಟ್ಟ ವಿಷಯದ ಉತ್ತರ ಪತ್ರಿಕೆಯ ಸ್ಕ್ಯಾನ್‌ ಪ್ರತಿಯನ್ನು ಪಡೆಯಬೇಕು.

ಸ್ಕ್ಯಾನ್‌ ಪ್ರತಿಯನ್ನು ಪಡೆದ ನಂತರ ಅಂಕಗಳ ಎಣಿಕೆಯಲ್ಲಿ ವ್ಯತ್ಯಾಸವಿದ್ದರೆ, ಅದನ್ನೂ ಖಚಿತಪಡಿಸಿಕೊಂಡ ನಂತರವಷ್ಟೇ ಮರುಎಣಿಕೆಗಾಗಿ ಅರ್ಜಿಯನ್ನು ಸಲ್ಲಿಸಬೇಕು. ಮರುಎಣಿಕೆಗಾಗಿ ಭೌತಿಕವಾಗಿ ಅರ್ಜಿಗಳನ್ನು ಸ್ವೀಕರಿಸುವುದನ್ನು ರದ್ದುಗೊಳಿಸಲಾಗಿದೆ. ಮರುಎಣಿಕೆ ಬಯಸುವ ಅಭ್ಯರ್ಥಿಗಳು ಆನ್‌ಲೈನ್ ಮುಖಾಂತರ ಅರ್ಜಿ ಸಲ್ಲಿಸಬೇಕಾಗಿರುತ್ತದೆ.

ಇನ್ನೂ ಮರುಎಣಿಕೆಯು ಉಚಿತವಾಗಿದ್ದು ಪ್ರತ್ಯೇಕ ಶುಲ್ಕವಿರುವುದಿಲ್ಲ. ಮರು ಎಣಿಕೆ ಅಂಕಗಳ ಎಣಿಕೆಯಲ್ಲಿ ವ್ಯತ್ಯಾಸವಿದ್ದಲ್ಲಿ ಪರಿಶೀಲಿಸಿ, ನಂತರ ಪರಿಷ್ಕೃತ ಪಟ್ಟಿಯನ್ನು ಬಿಡುಗಡೆ ಮಾಡಲಾಗುತ್ತದೆ.

ಇದನ್ನೂ ಓದಿ: Sensex Crash : ಷೇರು ಮಾರುಕಟ್ಟೆಯಲ್ಲಿ ಭಾರೀ ಕುಸಿತ, ಸೆನ್ಸೆಕ್ಸ್​ 1100 ಅಂಕಗಳಷ್ಟು ಪತನ

ಸಹಾಯವಾಣಿಗೆ ಕರೆ ಮಾಡಿ

ಎಸ್‌ಎಸ್‌ಎಲ್‌ಸಿ ಫಲಿತಾಂಶ, ಮೌಲ್ಯಮಾಪನಗೊಂಡ ಉತ್ತರ ಪತ್ರಿಕೆಗಳ ಸ್ಕ್ಯಾನ್‌ ಪಡೆಯುವ ಮತ್ತು ಮರು ಎಣಿಕೆಗೆ ಅರ್ಜಿ ಸಲ್ಲಿಸಲು ಯಾವುದೇ ಮಾಹಿತಿ ಪಡೆಯಬಹುದಾಗಿದೆ. ಹೀಗಾಗಿ ಕರ್ನಾಟಕ ಶಾಲಾ ಪರೀಕ್ಷೆ ಮತ್ತು ಮೌಲ್ಯನಿರ್ಣಯ ಮಂಡಳಿ ಸಹಾಯವಾಣಿಯನ್ನು ಆರಂಭವಿಸಿದೆ. ವಿದ್ಯಾರ್ಥಿಗಳು ಸಹಾಯವಾಣಿ ಸಂಖ್ಯೆ 080 23310075, 23310076ಕ್ಕೆ ಕರೆ ಮಾಡಬಹುದು.

Continue Reading
Advertisement
Roopa Iyer
ಕ್ರೈಂ18 mins ago

Roopa Iyer: ನಿರ್ದೇಶಕಿ ರೂಪಾ ಅಯ್ಯರ್‌ಗೂ ಆನ್‌ಲೈನ್‌ ಕಳ್ಳರ ಕಾಟ; ಅಧಿಕಾರಿಗಳ ಹೆಸರಿನಲ್ಲಿ ಕರೆ ಮಾಡಿ 30 ಲಕ್ಷ ರೂ.ಗೆ ಬೇಡಿಕೆ

Viral video
ಕ್ರೈಂ25 mins ago

Viral Video:ಛೀ.. ಎಂಥಾ ಹೇಯ ಕೃತ್ಯ! ಶಾಲಾ ಬಾಲಕಿ ಮೇಲೆ ಆಟೋ ಚಾಲಕನ ನೀಚ ಕೃತ್ಯ; ಶಾಕಿಂಗ್‌ ವಿಡಿಯೋ ವೈರಲ್‌

Prajwal Revanna Case SIT issues 2nd notice to Bhavani Revanna Big trouble for Revanna family
ಕ್ರೈಂ28 mins ago

Prajwal Revanna Case: ಭವಾನಿ ರೇವಣ್ಣಗೆ SIT 2ನೇ ನೋಟಿಸ್‌; ರೇವಣ್ಣ ಫ್ಯಾಮಿಲಿಗೆ ಭಾರಿ ಸಂಕಷ್ಟ!

Murder case
ಬೆಳಗಾವಿ40 mins ago

Murder Case: ಆಸ್ತಿಗಾಗಿ ದಾಯಾದಿಗಳ ಕಲಹ; ತಲೆ ಮೇಲೆ ರುಬ್ಬುವ ಕಲ್ಲು ಎತ್ತಿಹಾಕಿ ಕೊಲೆ

mustafa paichar praveen nettar ಪ್ರವೀಣ್‌ ನೆಟ್ಟಾರು
ಪ್ರಮುಖ ಸುದ್ದಿ1 hour ago

ಪ್ರವೀಣ್ ನೆಟ್ಟಾರು ಹತ್ಯೆ ಪ್ರಕರಣದ ಪ್ರಮುಖ ಆರೋಪಿ ಬಂಧನ; ಈತನನ್ನು ಹಿಡಿದುಕೊಟ್ಟವರಿಗಿತ್ತು 5 ಲಕ್ಷ ಬಹುಮಾನ!

Narendra Dabholkar
ದೇಶ1 hour ago

Narendra Dabholkar Case: ವಿಚಾರವಾದಿ ದಾಭೋಲ್ಕರ್ ಹತ್ಯೆ ಪ್ರಕರಣ; ಹಂತಕರಿಗೆ ಜೀವಾವಧಿ ಶಿಕ್ಷೆ

Star Suvarna
ಕಿರುತೆರೆ1 hour ago

Star Suvarna: ಬಹುಮಾನದ ಜತೆಗೆ ಮನೋರಂಜನೆ ಹೊತ್ತು ಬರುತ್ತಿದೆ ʼಸುವರ್ಣ ಗೃಹಮಂತ್ರಿʼ; ಯಾವಾಗ ಪ್ರಸಾರ?

Lok Sabha Election 2024 26000 km travelled for Lok Sabha campaigning CM to campaign for 14 to 18 hours a day
ರಾಜಕೀಯ1 hour ago

Lok Sabha Election 2024: ಲೋಕಸಭಾ ಪ್ರಚಾರಕ್ಕೆ 26 ಸಾವಿರ ಕಿಲೋ ಮೀಟರ್ ಸಂಚಾರ, ದಿನಕ್ಕೆ ಸರಾಸರಿ 14-18 ಗಂಟೆ ಸಿಎಂ ಪ್ರಚಾರ!

murder case kalaburagi
ಕಲಬುರಗಿ1 hour ago

Murder Case : ಕಾಂಗ್ರೆಸ್‌ಗೆ ವೋಟ್‌ ಹಾಕಿದ್ದಕ್ಕೆ ಅಮಾವಾಸ್ಯೆ ದಿನ ಕರೆದು ಕೊಂದರು

gold rate today
ಚಿನ್ನದ ದರ2 hours ago

Gold Rate Today: ಅಕ್ಷಯ ತದಿಗೆಯಂದು ಚಿನ್ನದ ಬೆಲೆಯಲ್ಲಿ ಭಾರೀ ಏರಿಕೆ; ಬಂಗಾರ ಕೊಳ್ಳಲು ಮುಗಿಬಿದ್ದ ಜನ; ದರಗಳು ಹೀಗಿವೆ

Sharmitha Gowda in bikini
ಕಿರುತೆರೆ7 months ago

Geetha Serial Kannada: ನಿದ್ದೆ ಕದ್ದ ಚೋರಿ! ನಟಿ `ಭಾನುಮತಿ’ ಹಾಟ್‌ ಪೋಟೊಗಳಿಗೆ ಫ್ಯಾನ್ಸ್ ಫುಲ್ ಫಿದಾ

Kannada Serials
ಕಿರುತೆರೆ7 months ago

Kannada Serials TRP: 2ನೇ ಸ್ಥಾನದಲ್ಲಿ 2 ಧಾರಾವಾಹಿಗಳು; ಟಿಆರ್‌ಪಿ ರೇಸ್‌ನಲ್ಲಿಲ್ಲ ಭಾಗ್ಯಲಕ್ಷ್ಮೀ!

Bigg Boss- Saregamapa 20 average TRP
ಕಿರುತೆರೆ7 months ago

Kannada Serials TRP: ಏಳನೇ ಸ್ಥಾನಕ್ಕೆ ʻಅಮೃತಧಾರೆʼ ಕುಸಿತ; ಬಿಗ್‌ ಬಾಸ್‌-ಸರಿಗಮಪ ಟಿಆರ್‌ಪಿ ಎಷ್ಟು?

galipata neetu
ಕಿರುತೆರೆ5 months ago

Kanyadana Serial: ಕಿರುತೆರೆಗೆ ಮತ್ತೆ ಎಂಟ್ರಿ ಕೊಟ್ಟ ʻಗಾಳಿಪಟʼ ಖ್ಯಾತಿಯ ʻನೀತುʼ!

Kannada Serials
ಕಿರುತೆರೆ7 months ago

Kannada Serials TRP: ನಾಲ್ಕನೇ ಸ್ಥಾನಕ್ಕೆ ಕುಸಿತ ಕಂಡ ʻಸೀತಾ ರಾಮʼ; ಟಿಆರ್‌ಪಿ ರೇಸ್‌ಗೆ ʻಭಾಗ್ಯಲಕ್ಷ್ಮಿʼ ಬ್ಯಾಕ್‌!

Kannada Serials
ಕಿರುತೆರೆ7 months ago

Kannada Serials TRP: ಟಿಆರ್‌ಪಿಯಲ್ಲಿ ʻಭಾಗ್ಯಲಕ್ಷ್ಮೀʼ ಹವಾ; ʻಪುಟ್ಟಕ್ಕನ ಮಕ್ಕಳುʼ ಧಾರಾವಾಹಿಗೆ ಸಂಕಷ್ಟ!

Bigg Boss' dominates TRP; Sita Rama fell to the sixth position
ಕಿರುತೆರೆ7 months ago

Kannada Serials TRP: ಟಿಆರ್‌ಪಿಯಲ್ಲಿ ʻಬಿಗ್ ಬಾಸ್ʼದೇ ಮೇಲುಗೈ; 6ನೇ ಸ್ಥಾನಕ್ಕೆ ಕುಸಿದ ʻಸೀತಾ ರಾಮʼ

geetha serial Dhanush gowda engagement
ಕಿರುತೆರೆ5 months ago

Dhanush Gowda: ಗೀತಾ ಧಾರಾವಾಹಿ ನಟನ ನಿಶ್ಚಿತಾರ್ಥ; ಭವ್ಯಾಳ ಕಮೆಂಟ್‌ ಬಾಕ್ಸ್‌ ಆಫ್‌!

varun
ಕಿರುತೆರೆ6 months ago

Brindavana Serial: ʼಬೃಂದಾವನʼ ಧಾರಾವಾಹಿಯಲ್ಲಿ ದೊಡ್ಡ ಟ್ವಿಸ್ಟ್‌; ಪ್ರಮುಖ ಪಾತ್ರಧಾರಿಯೇ ಬದಲು

Kannada Serials
ಕಿರುತೆರೆ8 months ago

Kannada Serials TRP: ಟಿಆರ್‌ಪಿಯಲ್ಲಿ ಏರಿಕೆ ಕಂಡ ʻಅಮೃತಧಾರೆʼ; ʻಗಟ್ಟಿಮೇಳʼಕ್ಕೆ ನಾಲ್ಕನೇ ಸ್ಥಾನ!

Rain Effect In karnataka
ಮಳೆ3 hours ago

Rain Effect : ಬಿರುಗಾಳಿ ರಭಸಕ್ಕೆ ಮನೆಯ ಗೇಟ್ ಬಿದ್ದು ಬಾಲಕಿ ಸಾವು; ಸಿಡಿಲಿಗೆ ಎತ್ತುಗಳು ಬಲಿ

Dina Bhavishya
ಭವಿಷ್ಯ9 hours ago

Dina Bhavishya: ಶುಭ ಶುಕ್ರವಾರ ಈ ರಾಶಿಯವರಿಗೆ ಖುಲಾಯಿಸಲಿದೆ ಲಕ್‌

Prajwal Revanna case Revanna bail plea to be heard on Monday Advocate Nagesh argument was as follows
ಕ್ರೈಂ16 hours ago

Prajwal Revanna Case: ರೇವಣ್ಣ ಜಾಮೀನು ಅರ್ಜಿ ಸೋಮವಾರಕ್ಕೆ: ಎಸ್‌ಐಟಿಗೆ ಹಿಗ್ಗಾಮುಗ್ಗಾ ತರಾಟೆ; ವಕೀಲ ನಾಗೇಶ್‌ ವಾದ ಹೀಗಿತ್ತು!

Prajwal Revanna Case Hasanambe is going to destroy this government HD Kumaraswamy curse
ರಾಜಕೀಯ17 hours ago

Prajwal Revanna Case: ಈ ಸರ್ಕಾರವನ್ನು ಹಾಸನಾಂಬೆ ಧ್ವಂಸ ಮಾಡಲಿದ್ದಾಳೆ: ಎಚ್‌ಡಿಕೆ ಶಾಪ

Prajwal Revanna Case DK Shivakumar alleged mastermind in 25000 pen drive allotment
ಹಾಸನ18 hours ago

Prajwal Revanna Case: 25,000 ಪೆನ್ ಡ್ರೈವ್ ಹಂಚಿಕೆಯಲ್ಲಿ ಡಿ.ಕೆ. ಶಿವಕುಮಾರ್ ಮಾಸ್ಟರ್ ಮೈಂಡ್ ಎಂದು ರಾಜ್ಯಪಾಲರಿಗೆ ದೂರು!

SSLC Result 2024 what is the reason for most of the students fail in SSLC
ಕರ್ನಾಟಕ1 day ago

SSLC Result 2024: ಎಸ್‌ಎಸ್‌ಎಲ್‌ಸಿಯಲ್ಲಿ ಹೆಚ್ಚಿನ ಮಕ್ಕಳು ಫೇಲ್‌ ಆಗಲು ಶಿಕ್ಷಣ ಇಲಾಖೆಯ ಈ ನಿರ್ಧಾರವೇ ಕಾರಣ!

Sslc exam Result 2024
ಶಿಕ್ಷಣ1 day ago

SSLC Result 2024 : ಎಸ್‌ಎಸ್‌ಎಲ್‌ಸಿ ಪರೀಕ್ಷೆಯಲ್ಲಿ ಫೇಲಾದರೂ, ಕಡಿಮೆ ಅಂಕ ಬಂದರೂ ಡೋಂಟ್‌ ವರಿ; ಇನ್ನೂ ಇದೆ ಎರಡು ಚಾನ್ಸ್‌!

SSLC Result 2024 secret behind 20 percent grace marks
ಕರ್ನಾಟಕ1 day ago

SSLC Result 2024: ಎಸ್‌ಎಸ್‌ಎಲ್‌ಸಿಯಲ್ಲಿ ಈ ಬಾರಿ ನೂರಕ್ಕೆ 25 ಅಂಕ ಪಡೆದವರೂ ಪಾಸ್! ಶೇ. 20 ಗ್ರೇಸ್ ಮಾರ್ಕ್ಸ್ ಕೊಟ್ಟಿದ್ದರ ಹಿಂದಿದೆ ಇಂಟರೆಸ್ಟಿಂಗ್ ಕತೆ!

SSLC Result 2024 78 schools get zero results in SSLC exams
ಬೆಂಗಳೂರು1 day ago

SSLC Result 2024: ಎಸ್‌ಎಸ್‌ಎಲ್‌ಸಿ ಎಕ್ಸಾಂನಲ್ಲಿ ಸಿಕ್ಸರ್‌ ಬಾರಿಸಿದ ಗ್ರಾಮೀಣ ಪ್ರತಿಭೆಗಳು; 78 ಶಾಲೆಗಳಲ್ಲಿ ಶೂನ್ಯ ರಿಸಲ್ಟ್‌!

SSLC Result 2024 SSLC students get 20 percent grace marks but result is very poor
ಶಿಕ್ಷಣ1 day ago

SSLC Result 2024: ಎಸ್‌ಎಸ್‌ಎಲ್‌ಸಿ ಮಕ್ಕಳಿಗೆ ಸಿಕ್ತು 20 ಪರ್ಸೆಂಟ್ ಗ್ರೇಸ್ ಮಾರ್ಕ್ಸ್‌! ಆದ್ರೂ ಫಲಿತಾಂಶ ತೀರಾ ಕಳಪೆ

ಟ್ರೆಂಡಿಂಗ್‌