Road Accident : ಸಿಲಿಂಡರ್‌ ಹೊತ್ತೊಯ್ಯುತ್ತಿದ್ದ ವಾಹನ ಪಲ್ಟಿ; ಸಪ್ಲೈಯರ್‌ ಸ್ಥಳದಲ್ಲೇ ಸಾವು - Vistara News

ವಿಜಯನಗರ

Road Accident : ಸಿಲಿಂಡರ್‌ ಹೊತ್ತೊಯ್ಯುತ್ತಿದ್ದ ವಾಹನ ಪಲ್ಟಿ; ಸಪ್ಲೈಯರ್‌ ಸ್ಥಳದಲ್ಲೇ ಸಾವು

Road Accident : ಚಾಲಕನ ನಿಯಂತ್ರಣ ತಪ್ಪಿ ಸಿಲಿಂಡರ್‌ಗಳನ್ನು ತುಂಬಿದ್ದ ವಾಹನವು ಪಲ್ಟಿಯಾಗಿದೆ. ಪರಿಣಾಮ ಸಪ್ಲೈಯರ್‌ ಸ್ಥಳದಲ್ಲೇ ಮೃತಪಟ್ಟಿದ್ದಾರೆ.

VISTARANEWS.COM


on

Vehicle carrying cylinder overturns Supplier dies on the spot
ಮಹತ್ವದ, ಕುತೂಹಲಕರ ಸುದ್ದಿಗಾಗಿ ಫಾಲೊ ಮಾಡಿ
Koo

ವಿಜಯನಗರ: ಸಿಲಿಂಡರ್‌ಗಳನ್ನು ಹೊತ್ತೊಯ್ಯುತ್ತಿದ್ದ ವಾಹನ ಪಲ್ಟಿಯಾಗಿದೆ. ಪರಿಣಾಮ ಸಿಲಿಂಡರ್ ಸಪ್ಲೈಯರ್ ಗಂಭೀರ ಗಾಯಗೊಂಡು ಸ್ಥಳದಲ್ಲೆ ಮೃತಪಟ್ಟಿದ್ದಾರೆ. ಹಿರೇಹಡಗಲಿ ಗ್ರಾಮದ ಬೀರಬ್ಬಿ ಕಾಶಿಂ ಸಾಬ್ (40) ಮೃತ ದುರ್ದೈವಿ.

ಹಿರೇಹಡಗಲಿ ಹಾಗೂ ಹಗರನೂರು ದಾರಿ ಮಧ್ಯೆ ಘಟನೆ ನಡೆದಿದೆ. ಚಾಲಕನ ನಿಯಂತ್ರಣ ತಪ್ಪಿ ಸಿಲಿಂಡರ್ ವಾಹನ ಪಲ್ಟಿಯಾಗಿದೆ. ಹಿರೆಹಡಗಲಿ ಮೂಲಕ ವಿವಿಧ ಗ್ರಾಮಗಳಿಗೆ ಕಾಶಿಂಸಾಬ್ ಸಿಲಿಂಡರ್ ಸರಬರಾಜು ಮಾಡುತ್ತಿದ್ದರು. ಪಲ್ಟಿಯಾದ ವಾಹನ ಹಿರೇಹಡಗಲಿ ಗ್ರಾಮ ಭಾರತ್ ಗ್ಯಾಸ್ ಏಜೆನ್ಸಿಗೆ ಸೇರಿದ್ದು ಎನ್ನಲಾಗಿದೆ.

ಅದೃಷ್ಟವಶಾತ್‌ ಗ್ಯಾಸ್‌ ಸಿಲಿಂಡರ್‌ ಸೋರಿಕೆಯಾಗಿ ಸ್ಫೋಟಗೊಂಡಿಲ್ಲ. ಸಿಲಿಂಡರ್‌ ವಾಹನ ಪಲ್ಟಿಯಾದ ವೇಳೆ ಅಕ್ಕ-ಪಕ್ಕ ಯಾರು ಇರಲಿಲ್ಲ. ಇಲ್ಲದಿದ್ದರೆ ಇನ್ನಷ್ಟು ಸಾವು-ನೋವಿಗೆ ಕಾರಣವಾಗುತ್ತಿತ್ತು. ಸ್ಥಳಕ್ಕೆ ಹಿರೇಹಡಗಲಿ ಠಾಣೆ ಪೊಲೀಸರು ಭೇಟಿ ನೀಡಿ ಪರಿಶೀಲಿಸಿದ್ದಾರೆ. ಮೃತದೇಹವನ್ನು ಮರಣೋತ್ತರ ಪರೀಕ್ಷೆಗೆ ರವಾನಿಸಲಾಗಿದೆ. ಈ ಸಂಬಂಧ ಪ್ರಕರಣ ದಾಖಲಾಗಿದ್ದು, ತನಿಖೆಯನ್ನು ಮುಂದುವರಿಸಿದ್ದಾರೆ.

ಕಾರಿನ ಡೋರ್‌ ಬಡಿದು ನಿಮ್ಹಾನ್ಸ್‌ ನೌಕರ ಸಾವು; ಯುವಕರಿಬ್ಬರ ಜೀವ ತೆಗೆದ ಬೈಕ್‌

ಬೆಂಗಳೂರು/ಕೋಲಾರ: ಕಾರು ಡಿಕ್ಕಿಯಾಗಿ ಗಂಭೀರ ಗಾಯಗೊಂಡಿದ್ದ ವ್ಯಕ್ತಿಯೊಬ್ಬರು ದಾರಣವಾಗಿ (Road Accident ) ಮೃತಪಟ್ಟಿದ್ದಾರೆ. ಬೆಂಗಳೂರಿನ ತಿಲಕ್‌ನಗರದ ಮುಖ್ಯ ರಸ್ತೆಯಲ್ಲಿ ಘಟನೆ ನಡೆದಿದೆ. ವೆಂಕಟೇಶ್ (53) ಮೃತ ದುರ್ದೈವಿ.

ವೆಂಕಟೇಶ್‌ ಅವರು ನಿಮ್ಹಾನ್ಸ್‌ನಲ್ಲಿ ಡಿ ಗ್ರೂಪ್ ನೌಕರನಾಗಿ ಕೆಲಸ ಮಾಡುತ್ತಿದ್ದರು. ನಿಮ್ಹಾನ್ಸ್‌ ಕಡೆಯಿಂದ ವೆಂಕಟೇಶ್ ಮನೆಗೆ ಹೋಗುತ್ತಿದ್ದರು. ಈ ವೇಳೆ ರಸ್ತೆಯಲ್ಲಿ ನಿಂತಿದ್ದ ಕಾರಿನ ಡೋರ್ ಅನ್ನು ದಿಢೀರ್ ತೆಗೆದಿದ್ದಾರೆ. ಪರಿಣಾಮ ಕಾರ್‌ ಡೋರ್‌ ಬಡಿದು ವೆಂಕಟೇಶ್ ತಲೆಗೆ ಗಂಭೀರ ಗಾಯವಾಗಿತ್ತು.

ಕೂಡಲೇ ಸ್ಥಳೀಯರೆಲ್ಲರೂ ಅವರನ್ನು ಆಸ್ಪತ್ರೆಗೆ ದಾಖಲು ಮಾಡಿದ್ದರು. ಆದರೆ ಚಿಕಿತ್ಸೆ ಫಲಿಸದೇ ವೆಂಕಟೇಶ್ ಆಸ್ಪತ್ರೆಯಲ್ಲಿ ಸಾವನ್ನಪ್ಪಿದ್ದಾರೆ. ಘಟನೆ ಸಂಬಂಧ ಮೈಕೊಲೇಔಟ್ ಸಂಚಾರಿ ಪೊಲೀಸ್ ಠಾಣೆಯಲ್ಲಿ ಪ್ರಕರಣ ದಾಖಲಾಗಿದೆ.

ಇದನ್ನೂ ಓದಿ: Water Crisis: ಬೆಂಗಳೂರಿಗರೇ ಹುಷಾರ್.. ಹೋಳಿ ಹಬ್ಬಕ್ಕೆ ನೀರಲ್ಲಿ ಜಾಲಿ ಮಾಡಿದ್ರೆ ಬೀಳುತ್ತೆ ಕೇಸ್‌

ಕೋಲಾರದಲ್ಲಿ ಟೆಂಪೋಗೆ ಬೈಕ್‌ ಡಿಕ್ಕಿ; ಇಬ್ಬರು ಸಾವು

ಟೆಂಪೋಗೆ ಬೈಕ್ ಡಿಕ್ಕಿ ಹೊಡೆದ ಪರಿಣಾಮ ಸ್ಥಳದಲ್ಲೆ ಇಬ್ಬರು ಯುವಕರು ಮೃತಪಟ್ಟಿದ್ದಾರೆ. ಕೋಲಾರ ಜಿಲ್ಲೆಯ ಬಂಗಾರಪೇಟೆ ತಾಲೂಕಿನ ಬೆಂಗನೂರು ಬಳಿ ಘಟನೆ ನಡೆದಿದೆ. ಬಂಗಾರಪೇಟೆ ಪಟ್ಟಣದ ನಿವಾಸಿ ಸಿದ್ದಾರ್ಥ (26), ಮಂಡ್ಯ ಮೂಲದ ರವಿ (30) ಎಂಬುವವರು ಮೃತಪಟ್ಟಿದ್ದಾರೆ.

ಬೆಂಗನೂರು ಬಳಿಯ ಖಾಸಗಿ ಗಾರ್ಮೆಂಟ್ಸ್‌ನಲ್ಲಿ ಕೆಲಸ ಮುಗಿಸಿ ವಾಪಸ್ ಆಗುವ ವೇಳೆ ಈ ಅಪಘಾತ ಸಂಭವಿಸಿದೆ. ಸ್ಥಳಕ್ಕೆ ಬಂಗಾರಪೇಟೆ ಪೊಲೀಸರು ಭೇಟಿ ನೀಡಿ ಪರಿಶೀಲನೆ ನಡೆಸಿದ್ದಾರೆ. ಇಬ್ಬರ ಮೃತದೇಹಗಳನ್ನು ಮರಣೋತ್ತರ ಪರೀಕ್ಷೆಗೆ ರವಾನಿಸಿದ್ದಾರೆ. ಈ ಸಂಬಂಧ ಪ್ರಕರಣ ದಾಖಲಿಸಿಕೊಂಡಿದ್ದು, ತನಿಖೆಯನ್ನು ನಡೆಸುತ್ತಿದ್ದಾರೆ.

ಈ ಸಂಗತಿಯ ಕುರಿತು ನಿಮ್ಮ ಅನಿಸಿಕೆ ಏನು? ಕಾಮೆಂಟ್ ಮೂಲಕ ತಿಳಿಸಿ

ಕ್ಷಣ ಕ್ಷಣದ ಮಾಹಿತಿಗಾಗಿ Vistara News FaceBook ಪೇಜ್ ಫಾಲೋ ಮಾಡಿ
ಮಹತ್ವದ ಮಾಹಿತಿಗಾಗಿ ವಿಸ್ತಾರ ನ್ಯೂಸ್ ಆ್ಯಪ್ ಉಚಿತವಾಗಿ ಡೌನ್ ಲೋಡ್ ಮಾಡಿಕೊಳ್ಳಿ: Andriod App | IOS App
Continue Reading
Click to comment

Leave a Reply

Your email address will not be published. Required fields are marked *

ಮಳೆ

Karnataka Weather : ರಾಜ್ಯಾದ್ಯಂತ ಗುಡುಗು ಸಹಿತ ಭಾರಿ ಮಳೆ; ಆರೆಂಜ್‌, ಯೆಲ್ಲೋ ಎಚ್ಚರಿಕೆ

Karnataka Weather Forecast : ರಾಜ್ಯಾದ್ಯಂತ ಗುಡುಗು ಸಹಿತ ಭಾರಿ ಮಳೆಯಾಗುವ (Rain News) ಸಾಧ್ಯತೆ ಇದ್ದು, ಹಲವು ಜಿಲ್ಲೆಗಳಿಗೆ ಆರೆಂಜ್‌ ಹಾಗೂ ಯೆಲ್ಲೋ ಅಲರ್ಟ್‌ ನೀಡಲಾಗಿದೆ. 50 ಕಿ.ಮೀ ವ್ಯಾಪ್ತಿಯಲ್ಲಿ ಬಿರುಗಾಳಿ ಬೀಸಲಿದ್ದು, ಮರದಡಿ ನಿಲ್ಲದಂತೆ ಎಚ್ಚರಿಕೆ ನೀಡಲಾಗಿದೆ.

VISTARANEWS.COM


on

By

Karnataka weather Forecast
Koo

ಬೆಂಗಳೂರು: ರಾಜ್ಯಾದ್ಯಂತ ಭಾರಿ ಮಳೆಯಾಗುವ (Rain News) ಸಾಧ್ಯತೆ ಇದೆ. ಪ್ರತ್ಯೇಕ ಕಡೆಗಳಲ್ಲಿ ಹಗುರದಿಂದ ಮಧ್ಯಮ ಮಳೆಯಾಗುವ ಸಾಧ್ಯತೆಯಿದೆ. ಗುಡುಗು ಸಹಿತ ಮಿಂಚು ಮತ್ತು ಗಾಳಿಯು ಗಂಟೆಗೆ 40-50 ಕಿ.ಮೀ ವ್ಯಾಪ್ತಿಯಲ್ಲಿ (Karnataka Weather Forecast) ಬೀಸಲಿದೆ.

ದಕ್ಷಿಣ ಒಳನಾಡಿನ ಜಿಲ್ಲೆಗಳಲ್ಲಿ ಪ್ರತ್ಯೇಕವಾಗಿ ಭಾರಿ ಮಳೆಯಾಗುವ ಸಾಧ್ಯತೆ ಇದೆ. ಬೆಂಗಳೂರು ವ್ಯಾಪ್ತಿಯಲ್ಲಿ ಸಾಧಾರಣ ಮಳೆಯಾಗುವ ಸಾಧ್ಯತೆ ಇದೆ. ಗರಿಷ್ಠ ಮತ್ತು ಕನಿಷ್ಠ ತಾಪಮಾನ ಕ್ರಮವಾಗಿ 31 ಮತ್ತು 22 ಡಿ.ಸೆ ಇರಲಿದೆ.

ಉತ್ತರ ಒಳನಾಡಿನ ಬಳ್ಳಾರಿ, ವಿಜಯನಗರ, ಹಾವೇರಿ, ಕೊಪ್ಪಳ ಮತ್ತು ರಾಯಚೂರು ಜಿಲ್ಲೆಗಳಲ್ಲಿ ವ್ಯಾಪಕ ಮಳೆಯಾಗುವ ಸಾಧ್ಯತೆಯಿದೆ. ಗದಗ, ಧಾರವಾಡ, ಬೆಳಗಾವಿ, ಬಾಗಲಕೋಟೆ, ಯಾದಗಿರಿ ಮತ್ತು ವಿಜಯಪುರ ಜಿಲ್ಲೆಗಳಲ್ಲಿ ಚದುರಿದಂತೆ ಹಗುರದಿಂದ ಸಾಧಾರಣ ಮಳೆಯಾಗುವ ಸಾಧ್ಯತೆಯಿದೆ. ಉಳಿದ ಭಾಗಗಳಲ್ಲಿ ಹಗುರದಿಂದ ಹಗುರವಾದ ಮಳೆಯಾಗಲಿದೆ.

ಮಲೆನಾಡಿನ ಚಿಕ್ಕಮಗಳೂರು, ಹಾಸನ, ಕೊಡಗು ಜಿಲ್ಲೆಗಳಲ್ಲಿ ಗುಡುಗು ಸಹಿತ ಭಾರೀ ಮಳೆ ಸಾಧ್ಯತೆ ಇದ್ದು, ಶಿವಮೊಗ್ಗ ಜಿಲ್ಲೆಯಾದ್ಯಂತ ಸಾಧಾರಣ ಮಳೆಯಾಗುವ ಸಾಧ್ಯತೆ ಇದೆ. ಕರಾವಳಿಯ ದಕ್ಷಿಣ ಕನ್ನಡ ಜಿಲ್ಲೆಯಲ್ಲಿ ಗುಡುಗು ಸಹಿತ ಭಾರೀ ಮಳೆಯಾಗಲಿದೆ. ಉಡುಪಿ, ಉತ್ತರ ಕನ್ನಡದಲ್ಲಿ ವ್ಯಾಪಕವಾಗಿ ಹಗುರದಿಂದ ಮಧ್ಯಮ ಮಳೆಯಾಗುತ್ತದೆ.

ಇದನ್ನೂ ಓದಿ: Anjali Murder Case: ನನ್ನ ಮಗ ಮಾಡಿದ್ದು ತಪ್ಪು, ಕೋರ್ಟ್ ಅವನಿಗೆ ಯಾವ ಶಿಕ್ಷೆಯಾದ್ರೂ ಕೊಡಲಿ: ಆರೋಪಿ ಗಿರೀಶ್ ತಾಯಿ

ಆರೆಂಜ್‌, ಯೆಲ್ಲೋ ಅಲರ್ಟ್‌

ಚಿತ್ರದುರ್ಗ, ಹಾಸನ, ಕೊಡಗು ಮತ್ತು ತುಮಕೂರು ಜಿಲ್ಲೆಗಳಲ್ಲಿ ಗುಡುಗು ಸಹಿತ ಭಾರೀ ಮಳೆಯಾಗುವ ಸಾಧ್ಯತೆ ಇದ್ದು, ಆರೆಂಜ್ ಅಲರ್ಟ್ ಘೋಷಿಸಲಾಗಿದೆ. ಭಾರೀ ಮಳೆಯೊಂದಿಗೆ ಗುಡುಗು, ಬಿರುಗಾಳಿಯು ಗಂಟೆಗೆ 30-40 ಕಿ.ಮೀ ಬೀಸಲಿದೆ.

ದಕ್ಷಿಣ ಕನ್ನಡ, ಉಡುಪಿ ಮತ್ತು ಉತ್ತರ ಕನ್ನಡ, ಬೆಂಗಳೂರು ಗ್ರಾಮಾಂತರ, ಬೆಂಗಳೂರು ನಗರ, ಚಾಮರಾಜನಗರ, ಚಿಕ್ಕಬಳ್ಳಾಪುರ, ಚಿಕ್ಕಮಗಳೂರು, ಕೋಲಾರ, ಮಂಡ್ಯ, ಮೈಸೂರು, ರಾಮನಗರ ಮತ್ತು ಶಿವಮೊಗ್ಗದಲ್ಲೂ ವ್ಯಾಪಕ ಮಳೆಯಾಗಲಿದೆ. ಹೀಗಾಗಿ ಯೆಲ್ಲೋ ಅಲರ್ಟ್‌ ಘೋಷಿಸಲಾಗಿದೆ.

ಈ ಸಂಗತಿಯ ಕುರಿತು ನಿಮ್ಮ ಅನಿಸಿಕೆ ಏನು? ಕಾಮೆಂಟ್ ಮೂಲಕ ತಿಳಿಸಿ

Continue Reading

ಮಳೆ

Rain News: ಬನವಾಸಿಯಲ್ಲಿ ಆಟವಾಡುತ್ತಿದ್ದ ಬಾಲಕ ಸಿಡಿಲು ಬಡಿದು ಸಾವು; ಚಿಕ್ಕಮಗಳೂರು, ಹಾಸನದಲ್ಲಿ ಮಳೆ ಅವಾಂತರ

Rain News: ಬನವಾಸಿಯ ಜಯಂತಿ ಪ್ರೌಢಶಾಲಾ ಮೈದಾನದಲ್ಲಿ ಗೆಳೆಯರೊಂದಿಗೆ ಆಟವಾಡುತ್ತಿದ್ದಾಗ ಬಿರುಗಾಳಿ ಸಹಿತ ಭಾರಿ ಮಳೆ ಬರುತ್ತಿತ್ತು. ಈ ವೇಳೆ ಸಿಡಿಲು ಬಡಿದಿದ್ದು, ಆಸ್ಪಕ್‌ ಅಲಿ ಸ್ಥಳದಲ್ಲಿಯೇ ಮೃತಪಟ್ಟಿದ್ದಾನೆ. ಆಸ್ಪಕ್‌ನು ಬನವಾಸಿಯ ಮೀನು ಮಾರುಕಟ್ಟೆ ನಿವಾಸಿಯಾಗಿದ್ದಾನೆ. ಬಾಲಕನ ಕುಟುಂಬಸ್ಥರ ಆಕ್ರಂದನ ಮುಗಿಲು ಮುಟ್ಟಿದೆ. ಬನವಾಸಿ ಪೊಲೀಸ್ ಠಾಣಾ ವ್ಯಾಪ್ತಿಯಲ್ಲಿ ಘಟನೆ ನಡೆದಿದೆ. ಇನ್ನು ಚಿಕ್ಕಮಗಳೂರು ಹಾಗೂ ಹಾಸನದಲ್ಲಿಯೂ ಭಾರಿ ಮಳೆಗೆ ಜನಜೀವನ ಅಸ್ತವ್ಯಸ್ತವಾಗಿದೆ.

VISTARANEWS.COM


on

Rain News Boy dies after being struck by lightning in Banavasi Heavy rains lash Chikkamagaluru and Hassan
ಮೃತ ಆಸ್ಪಕ್ ಅಲಿ
Koo

ಕಾರವಾರ/ಬೆಂಗಳೂರು: ರಾಜ್ಯಾದ್ಯಂತ ಗುಡುಗು ಸಹಿತ ಭಾರಿ ಮಳೆ (Rain News) ಆಗುತ್ತಿದ್ದು, ಸಾಕಷ್ಟು ಹಾನಿಯನ್ನುಂಟು ಮಾಡಿದೆ. ಇನ್ನು ಉತ್ತರ ಕನ್ನಡ ಜಿಲ್ಲೆಯ ಶಿರಸಿ ತಾಲೂಕಿನ ಬನವಾಸಿಯಲ್ಲಿ ಬಾಲಕನೊಬ್ಬ ಆಟ ಆಡುತ್ತಿದ್ದಾಗ ಸಿಡಿಲು ಬಡಿದು ಮೃತಪಟ್ಟಿದ್ದಾನೆ. ಇನ್ನು ಚಿಕ್ಕಮಗಳೂರು ಹಾಗೂ ಹಾಸನದಲ್ಲಿಯೂ ಭಾರಿ ಮಳೆಗೆ ಜನಜೀವನ ಅಸ್ತವ್ಯಸ್ತವಾಗಿದೆ. ಅಲ್ಲದೆ, ಭಾನುವಾರ ಚಿಕ್ಕಮಗಳೂರು, ಶಿವಮೊಗ್ಗ, ಕೊಡಗು ಜಿಲ್ಲೆಗಳಲ್ಲಿ ಗುಡುಗು – ಸಿಡಿಲು ಸಹಿತ ಗಾಳಿಯೊಂದಿಗೆ ಭಾರಿ ಮಳೆಯಾಗುವ ಸಾಧ್ಯತೆ ಹೆಚಿದೆ ಎಂದು ಹವಾಮಾನ ಇಲಾಖೆ ತನ್ನ ಮುನ್ಸೂಚನಾ ವರದಿಯಲ್ಲಿ (Karnataka Weather Forecast Report) ಹೇಳಿದೆ.

ಬನವಾಸಿಯ ಜಯಂತಿ ಪ್ರೌಢಶಾಲಾ ಮೈದಾನದಲ್ಲಿ ಬಾಲಕನೊಬ್ಬ ಆಟವಾಡುವಾಗ ಸಿಡಿಲು ಬಡಿದು ಮೃತಪಟ್ಟಿದ್ದಾನೆ. ಆಸ್ಪಕ್ ಅಲಿ (16) ಮೃತ ದುರ್ದೈವಿ.

ಬನವಾಸಿಯ ಜಯಂತಿ ಪ್ರೌಢಶಾಲಾ ಮೈದಾನದಲ್ಲಿ ಗೆಳೆಯರೊಂದಿಗೆ ಆಟವಾಡುತ್ತಿದ್ದಾಗ ಬಿರುಗಾಳಿ ಸಹಿತ ಭಾರಿ ಮಳೆ ಬರುತ್ತಿತ್ತು. ಈ ವೇಳೆ ಸಿಡಿಲು ಬಡಿದಿದ್ದು, ಆಸ್ಪಕ್‌ ಅಲಿ ಸ್ಥಳದಲ್ಲಿಯೇ ಮೃತಪಟ್ಟಿದ್ದಾನೆ. ಆಸ್ಪಕ್‌ನು ಬನವಾಸಿಯ ಮೀನು ಮಾರುಕಟ್ಟೆ ನಿವಾಸಿಯಾಗಿದ್ದಾನೆ. ಬಾಲಕನ ಕುಟುಂಬಸ್ಥರ ಆಕ್ರಂದನ ಮುಗಿಲು ಮುಟ್ಟಿದೆ. ಬನವಾಸಿ ಪೊಲೀಸ್ ಠಾಣಾ ವ್ಯಾಪ್ತಿಯಲ್ಲಿ ಘಟನೆ ನಡೆದಿದೆ.

ಚಿಕ್ಕಮಗಳೂರಲ್ಲೂ ಭಾರಿ ಮಳೆ

ಚಿಕ್ಕಮಗಳೂರಿನಲ್ಲಿ ಮಳೆ (Rain News) ಆರ್ಭಟ ಮುಂದುವರಿದಿದೆ. ರಾತ್ರಿಯಿಡೀ ಜಿಲ್ಲೆಯ ಹಲವೆಡೆ ಭಾರಿ ಮಳೆಯಾಗಿದ್ದು, ಹಳ್ಳ ಕೊಳ್ಳಗಳು ಉಕ್ಕಿ ಹರಿದಿವೆ. ಕಳಸಾ ಪುರ, ಗಾಳಿ ಹಳ್ಳಿ, ಮಾಗಡಿ, ಬೆಳವಾಡಿ, ಲಕ್ಯಾ, ಸಿಂದಿಗೆರೆ ಭಾಗದಲ್ಲಿ ಭಾರಿ ಮಳೆಯಾಗಿದೆ. ರಸ್ತೆ, ಸೇತುವೆ ಮೇಲೆ ನದಿಯಂತೆ ನೀರು ಹರಿದಿದೆ. ಸುತ್ತಮುತ್ತಲಿನ ತೋಟ, ಗದ್ದೆಗಳು ಸಂಪೂರ್ಣ ಜಲಾವೃತಗೊಂಡಿವೆ. ಕೆರೆಗಳು ಸಂಪೂರ್ಣ ತುಂಬುವ ಹಂತ ತಲುಪಿದೆ. ಚಿಕ್ಕಮಗಳೂರು ತಾಲೂಕಿನ ಐತಿಹಾಸಿಕ ಮಾಗಡಿ ದೊಡ್ಡ ಕೆರೆಗೂ ಭಾರಿ ಪ್ರಮಾಣ ನೀರು ಹರಿದಿದೆ.

ಹಾಸನದಲ್ಲಿ ಸುರಿದ ಧಾರಾಕಾರ ಮಳೆ

ಹಾಸನ ನಗರದ ಹಲವೆಡೆ ಬಿಟ್ಟು ಬಿಡದೆ ಧಾರಾಕಾರವಾಗಿ ಮಳೆ ಸುರಿದಿದೆ. ಶನಿವಾರ ಕಳೆದೊಂದು ಗಂಟೆಯಿಂದ ಹಲವೆಡೆ ಮಳೆ ಆರ್ಭಟಿಸಿದ್ದು, ಜನಜೀವನ ಅಸ್ತವ್ಯಸ್ತವಾಗಿತ್ತು. ಭಾರಿ ಮಳೆಗೆ ಹಾಸನ ನಗರದಲ್ಲಿ ಪಾದಚಾರಿಗಳು ವಾಹನ ಸವಾರರು ಪರದಾಡಿದರು. ಚನ್ನರಾಯಪಟ್ಟಣ, ಹೊಳೆನರಸೀಪುರ, ಸಕಲೇಶಪುರ, ಆಲೂರು ಭಾಗಗಳಲ್ಲೂ ಮಳೆಯಾಗಿದೆ.

ತುಮಕೂರಿನಲ್ಲಿ ಗುಡುಗು ಸಹಿತ ಮಳೆ

ಶನಿವಾರ ಸಂಜೆಯಾಗುತ್ತಿದ್ದಂತೆ ತುಮಕೂರಿನಲ್ಲಿ ವರುಣನ ಆರ್ಭಟ ಜೋರಾಗಿತ್ತು. ಗುಡುಗು, ಸಿಡಿಲು, ಬಿರುಗಾಳಿ ಸಹಿತ ಮಳೆಯಾಗಿದೆ. ತುಮಕೂರು ನಗರ, ಗ್ರಾಮಾಂತರ, ಗುಬ್ಬಿ ಸೇರಿದಂತೆ ಜಿಲ್ಲೆಯ ಹಲವೆಡೆ ಭಾರಿ ಮಳೆಯಾಗಿದೆ. ತುಮಕೂರು ನಗರದ ರಸ್ತೆ ಮೇಲೆ ಹಳ್ಳದಂತೆ ಹರಿಯುತ್ತಿರುವ ನೀರಿನಿಂದಾಗಿ ವಾಹನ ಸವಾರರ ಪರದಾಡಬೇಕಾಯಿತು. ಹಲವೆಡೆ ವಿದ್ಯುತ್ ವ್ಯತ್ಯಯ ಉಂಟಾಗಿದೆ.

ಇದನ್ನೂ ಓದಿ: Koppal Tragedy : ಶೌಚಾಲಯದ ಗೋಡೆ ಕುಸಿದು ಮಹಿಳೆಯರಿಬ್ಬರು ಸಾವು; ಈಜಲು ಹೋದ ಯುವಕ ನೀರುಪಾಲು

ಭಾನುವಾರವೂ ಇರಲಿದೆ ಮಳೆ ಮೋಡಿ

ಮಲೆನಾಡಿನ ಚಿಕ್ಕಮಗಳೂರು, ಶಿವಮೊಗ್ಗ, ಕೊಡಗು ಜಿಲ್ಲೆಗಳಲ್ಲಿ ಒಂದು ಅಥವಾ ಸ್ಥಳಗಳಲ್ಲಿ ಭಾರೀ ಗಾಳಿಯೊಂದಿಗೆ (40-50 kmph) ಗುಡುಗು ಸಹಿತ ಭಾರಿ ಮಳೆಯಾಗುವ ಸಾಧ್ಯತೆಯಿದೆ. ಕರಾವಳಿಯ ದಕ್ಷಿಣ ಕನ್ನಡ, ಉಡುಪಿ, ಉತ್ತರ ಕನ್ನಡದಲ್ಲಿ ಗುಡುಗು ಸಹಿತ ಮಳೆಯಾಗುವ ಸಾಧ್ಯತೆಯಿದೆ.

ದಕ್ಷಿಣ ಒಳನಾಡಿನ ಮೈಸೂರು, ಮಂಡ್ಯ, ಚಾಮರಾಜನಗರ, ಕೋಲಾರ, ಚಿಕ್ಕಬಳ್ಳಾಪುರ, ರಾಮನಗರ, ಬೆಂಗಳೂರು ನಗರ, ಬೆಂಗಳೂರು ಗ್ರಾಮಾಂತರ, ಹಾಸನ ಜಿಲ್ಲೆಗಳ ಒಂದು ಅಥವಾ ಸ್ಥಳಗಳಲ್ಲಿ ಮಳೆಯು ಅಬ್ಬರಿಸಲಿದೆ. ಬಳ್ಳಾರಿ, ಚಿತ್ರದುರ್ಗ, ದಾವಣಗೆರೆ, ತುಮಕೂರು, ವಿಜಯನಗರ ಜಿಲ್ಲೆಗಳಲ್ಲಿ ಹೆಚ್ಚಿನ ಸ್ಥಳಗಳಲ್ಲಿ ಜೋರಾದ ಗಾಳಿಯೊಂದಿಗೆ (40-50 kmph) ಸಾಧಾರಣ ಮಳೆಯಾಗಲಿದೆ.

ಉತ್ತರ ಒಳನಾಡಿನ ಧಾರವಾಡ, ಹಾವೇರಿ ಜಿಲ್ಲೆಗಳ ಕೆಲವೆಡೆ ಬಿರುಗಾಳಿ (30-40 kmph) ಸಹಿತ ಸಾಧಾರಣ ಮಳೆಯಾಗುವ ಸಂಭವವಿದೆ. ಬಾಗಲಕೋಟೆ, ಬೆಳಗಾವಿ, ಬೀದರ್, ಗದಗ, ಕಲಬುರಗಿ, ಕೊಪ್ಪಳ, ರಾಯಚೂರು, ವಿಜಯಪುರ, ಯಾದಗಿರಿಯಲ್ಲಿ ಗುಡುಗು ಸಹಿತ ಗಾಳಿಯೊಂದಿಗೆ (30-40 kmph) ಹಗುರ ಮಳೆಯಾಗುವ ಸಾಧ್ಯತೆಯಿದೆ.

Continue Reading

ಮಳೆ

Karnataka Weather : ಮಲೆನಾಡಿನಲ್ಲಿ ಮಳೆ ಮೋಡಿ; ಭಾನುವಾರವೂ ಅಬ್ಬರ ಇರಲಿದೆ ನೋಡಿ

Heavy rain : ಶನಿವಾರದಂದು ಚಿಕ್ಕಮಗಳೂರು, ಹಾಸನ, ತುಮಕೂರಲ್ಲಿ ಭಾರಿ ಮಳೆಯಾಗುತ್ತಿದ್ದು, ರಸ್ತೆ ಮೇಲೆ ನದಿಯಂತೆ ನೀರು ಹರಿಯುತ್ತಿದೆ. ರಾಜ್ಯಾದ್ಯಂತ ಇನ್ನೊಂದು ವಾರ ಮಳೆ (Rain News) ಜೋರಾಗಿ ಇರಲಿದೆ ಎಂದು ಹವಾಮಾನ ಇಲಾಖೆ ಮುನ್ಸೂಚನೆಯನ್ನು (Karnataka Weather Forecast) ನೀಡಿದೆ.

VISTARANEWS.COM


on

By

Karnataka Weather Forecast Rain alert
Koo

ಚಿಕ್ಕಮಗಳೂರು/ಹಾಸನ: ರಾಜ್ಯಾದ್ಯಂತ ಗುಡುಗು ಸಹಿತ ಮಳೆಯು (Karnataka Weather Forecast) ಅಬ್ಬರಿಸುತ್ತಿದೆ. ಚಿಕ್ಕಮಗಳೂರಿನಲ್ಲಿ ಮಳೆ (Rain News) ಆರ್ಭಟ ಮುಂದುವರಿದಿದೆ. ರಾತ್ರಿಯಿಡೀ ಜಿಲ್ಲೆಯ ಹಲವೆಡೆ ಭಾರಿ ಮಳೆಯಾಗಿದ್ದು ಹಳ್ಳ ಕೊಳ್ಳಗಳು ಉಕ್ಕಿ ಹರಿಯುತ್ತಿವೆ. ಕಳಸಾ ಪುರ, ಗಾಳಿ ಹಳ್ಳಿ, ಮಾಗಡಿ, ಬೆಳವಾಡಿ, ಲಕ್ಯಾ, ಸಿಂದಿಗೆರೆ ಭಾಗದಲ್ಲಿ ಭಾರಿ ಮಳೆಯಾಗುತ್ತಿದೆ. ರಸ್ತೆ, ಸೇತುವೆ ಮೇಲೆ ನದಿಯಂತೆ ನೀರು ಹರಿಯುತ್ತಿರುದೆ.

ಇನ್ನೂ ಭಾರಿ ಮಳೆಗೆ ಸುತ್ತಮುತ್ತಲಿನ ತೋಟ, ಗದ್ದೆಯು ಸಂಪೂರ್ಣ ಜಲಾವೃತಗೊಂಡಿದೆ. ಕೆರೆಗಳು ಸಂಪೂರ್ಣ ತುಂಬುವ ಹಂತ ತಲುಪಿದೆ. ಚಿಕ್ಕಮಗಳೂರು ತಾಲೂಕಿನ ಐತಿಹಾಸಿಕ ಮಾಗಡಿ ದೊಡ್ಡ ಕೆರೆಗೂ ಭಾರಿ ಪ್ರಮಾಣ ನೀರು ಹರಿದಿದೆ.

ಹಾಸನದಲ್ಲಿ ಸುರಿದ ಧಾರಾಕಾರ ಮಳೆ

ಹಾಸನ ನಗರದ ಹಲವೆಡೆ ಬಿಟ್ಟು ಬಿಡದೆ ಧಾರಾಕಾರವಾಗಿ ಮಳೆ ಸುರಿದಿದೆ. ಶನಿವಾರ ಕಳೆದೊಂದು ಗಂಟೆಯಿಂದ ಹಲವೆಡೆ ಮಳೆ ಆರ್ಭಟಿಸಿದ್ದು, ಜನ ಜೀವನ ಅಸ್ತವ್ಯಸ್ತವಾಗಿತ್ತು. ಭಾರಿ ಮಳೆಗೆ ಹಾಸನ ನಗರದಲ್ಲಿ ಪಾದಾಚಾರಿಗಳು ವಾಹನ ಸವಾರರು ಪರದಾಡಿದರು. ಚನ್ನರಾಯಪಟ್ಟಣ, ಹೊಳೆನರಸೀಪುರ, ಸಕಲೇಶಪುರ, ಆಲೂರು ಭಾಗಗಳಲ್ಲೂ ಮಳೆಯಾಗಿದೆ.

ತುಮಕೂರಿನಲ್ಲಿ ಗುಡುಗು ಸಹಿತ ಮಳೆ

ಶನಿವಾರ ಸಂಜೆಯಾಗುತ್ತಿದ್ದಂತೆ ತುಮಕೂರಿನಲ್ಲಿ ವರುಣನ ಆರ್ಭಟ ಜೋರಾಗಿತ್ತು. ಗುಡುಗು, ಸಿಡಿಲು, ಬಿರುಗಾಳಿ ಸಹಿತ ಮಳೆಯಾಗಿದೆ. ತುಮಕೂರು ನಗರ, ಗ್ರಾಮಾಂತರ, ಗುಬ್ಬಿ ಸೇರಿದಂತೆ ಜಿಲ್ಲೆಯ ಹಲವೆಡೆ ಭಾರಿ ಮಳೆಯಾಗಿದೆ. ತುಮಕೂರು ನಗರದ ರಸ್ತೆ ಮೇಲೆ ಹಳ್ಳದಂತೆ ಹರಿಯುತ್ತಿರುವ ನೀರಿನಿಂದಾಗಿ ವಾಹನ ಸವಾರರ ಪರದಾಡಬೇಕಾಯಿತು. ಹಲವೆಡೆ ವಿದ್ಯುತ್ ವ್ಯತ್ಯಯ ಉಂಟಾಗಿದೆ.

ಇದನ್ನೂ ಓದಿ: Koppal Tragedy : ಶೌಚಾಲಯದ ಗೋಡೆ ಕುಸಿದು ಮಹಿಳೆಯರಿಬ್ಬರು ಸಾವು; ಈಜಲು ಹೋದ ಯುವಕ ನೀರುಪಾಲು

ಭಾನುವಾರವೂ ಇರಲಿದೆ ಮಳೆ ಮೋಡಿ

ಮಲೆನಾಡಿನ ಚಿಕ್ಕಮಗಳೂರು, ಶಿವಮೊಗ್ಗ, ಕೊಡಗು ಜಿಲ್ಲೆಗಳಲ್ಲಿ ಒಂದು ಅಥವಾ ಸ್ಥಳಗಳಲ್ಲಿ ಭಾರೀ ಗಾಳಿಯೊಂದಿಗೆ (40-50 kmph) ಗುಡುಗು ಸಹಿತ ಭಾರೀ ಮಳೆಯಾಗುವ ಸಾಧ್ಯತೆಯಿದೆ. ಕರಾವಳಿಯ ದಕ್ಷಿಣ ಕನ್ನಡ, ಉಡುಪಿ, ಉತ್ತರ ಕನ್ನಡದಲ್ಲಿ ಗುಡುಗು ಸಹಿತ ಮಳೆಯಾಗುವ ಸಾಧ್ಯತೆಯಿದೆ.

ದಕ್ಷಿಣ ಒಳನಾಡಿನ ಮೈಸೂರು, ಮಂಡ್ಯ, ಚಾಮರಾಜನಗರ, ಕೋಲಾರ, ಚಿಕ್ಕಬಳ್ಳಾಪುರ, ರಾಮನಗರ, ಬೆಂಗಳೂರು ನಗರ, ಬೆಂಗಳೂರು ಗ್ರಾಮಾಂತರ, ಹಾಸನ ಜಿಲ್ಲೆಗಳ ಒಂದು ಅಥವಾ ಸ್ಥಳಗಳಲ್ಲಿ ಮಳೆಯು ಅಬ್ಬರಿಸಲಿದೆ. ಬಳ್ಳಾರಿ, ಚಿತ್ರದುರ್ಗ, ದಾವಣಗೆರೆ, ತುಮಕೂರು, ವಿಜಯನಗರ ಜಿಲ್ಲೆಗಳಲ್ಲಿ ಹೆಚ್ಚಿನ ಸ್ಥಳಗಳಲ್ಲಿ ಜೋರಾದ ಗಾಳಿಯೊಂದಿಗೆ (40-50 kmph) ಸಾಧಾರಣ ಮಳೆಯಾಗಲಿದೆ.

ಉತ್ತರ ಒಳನಾಡಿನ ಧಾರವಾಡ, ಹಾವೇರಿ ಜಿಲ್ಲೆಗಳ ಕೆಲವೆಡೆ ಬಿರುಗಾಳಿ (30-40 kmph) ಸಹಿತ ಸಾಧಾರಣ ಮಳೆಯಾಗುವ ಸಂಭವವಿದೆ. ಬಾಗಲಕೋಟೆ, ಬೆಳಗಾವಿ, ಬೀದರ್, ಗದಗ, ಕಲಬುರಗಿ, ಕೊಪ್ಪಳ, ರಾಯಚೂರು, ವಿಜಯಪುರ, ಯಾದಗಿರಿಯಲ್ಲಿ ಗುಡುಗು ಸಹಿತ ಗಾಳಿಯೊಂದಿಗೆ (30-40 kmph) ಹಗುರ ಮಳೆಯಾಗುವ ಸಾಧ್ಯತೆಯಿದೆ.

ಈ ಸಂಗತಿಯ ಕುರಿತು ನಿಮ್ಮ ಅನಿಸಿಕೆ ಏನು? ಕಾಮೆಂಟ್ ಮೂಲಕ ತಿಳಿಸಿ

Continue Reading

ಬೆಂಗಳೂರು ಗ್ರಾಮಾಂತರ

Road Accident : ಡಿವೈಡರ್‌ಗೆ ಡಿಕ್ಕಿ ಹೊಡೆದು ಪಕ್ಕದ ಹೆದ್ದಾರಿಗೆ ಹಾರಿದ ಕೆಎಸ್‌ಆರ್‌ಟಿಸಿ ಬಸ್; ಬೈಕ್‌ನಿಂದ ಎಗರಿ ಬಿದ್ದ ಬಾಲಕ ಸಾವು

Road Accident : ತುಮಕೂರು ರಸ್ತೆ ಮಾದಾವರ ಫ್ಲೈಓವರ್ ಸಮೀಪ ಭೀಕರ ಅಪಘಾತ ಸಂಭವಿಸಿದೆ. ಡಿವೈಡರ್‌ಗೆ ಡಿಕ್ಕಿ ಹೊಡೆದ ಕೆಎಸ್‌ಆರ್‌ಟಿಸಿ ಬಸ್‌ ಪಕ್ಕದ ಹೆದ್ದಾರಿಗೆ ಹಾರಿದೆ. ಪರಿಣಾಮ ಬಸ್ಸಿನಲ್ಲಿದ್ದ ಪ್ರಯಾಣಿಕರು ಗಂಭೀರ ಗಾಯಗೊಂಡಿದ್ದಾರೆ.

VISTARANEWS.COM


on

By

Road Accident
Koo

ನೆಲಮಂಗಲ: ಬೆಂಗಳೂರು ಗ್ರಾಮಾಂತರ ಜಿಲ್ಲೆಯ ನೆಲಮಂಗಲ ಸಮೀಪದ ಅಡಕಮಾರನಹಳ್ಳಿಯ ತುಮಕೂರು ರಸ್ತೆ ಮಾದಾವರ ಫ್ಲೈಓವರ್ ಬಳಿ ಭಾರೀ ದುರಂತವೊಂದು (Road Accident) ತಪ್ಪಿದೆ. ಚಾಲಕನ ನಿಯಂತ್ರಣ ತಪ್ಪಿದ ಕೆಎಸ್‌ಆರ್‌ಟಿಸಿ ಬಸ್‌ ಡಿವೈಡರ್‌ಗೆ ಡಿಕ್ಕಿ ಹೊಡೆದು ಹೆದ್ದಾರಿಯ ಪಕ್ಕದ ರಸ್ತೆಗೆ ಹಾರಿದ ಘಟನೆ ನಡೆದಿದೆ.

ಕೆಎಸ್‌ಆರ್‌ಟಿಸಿ ಬಸ್‌ವೊಂದು ಪ್ರಯಾಣಿಕರನ್ನು ಹೊತ್ತು ಸೋಮವಾರ ಪೇಟೆಯಿಂದ ಬೆಂಗಳೂರಿಗೆ ಬರುತ್ತಿತ್ತು. ನೆಲಮಂಗಲ ಬೆಂಗಳೂರು ರಾಷ್ಟ್ರೀಯ ಹೆದ್ದಾರಿ 4ರ ಸಮೀಪ ಬಂದಾಗ ಚಾಲಕನ ನಿಯಂತ್ರಣ ತಪ್ಪಿದ ಬಸ್‌ ಡಿವೈಡರ್‌ಗೆ ಡಿಕ್ಕಿ ಹೊಡೆದು, ಹೆದ್ದಾರಿಯ ತಡೆಗೋಡೆಯನ್ನು ಹಾರಿ ಪಕ್ಕದ ರಸ್ತೆಗೆ ಬಂದು ನಿಂತಿತ್ತು. ಇದು 40 ಅಡಿ ಎತ್ತರದ ಫ್ಲೈಓವರ್‌ನಲ್ಲಿ ಘಟನೆ ನಡೆದಿದೆ. ಡಿಕ್ಕಿ ಹೊಡೆದ ರಭಸಕ್ಕೆ ಒಂದು ವೇಳೆ ಬಸ್‌ ಏನಾದರೂ 40 ಅಡಿ ಎತ್ತರದಿಂದ ಕೆಳಗೆ ಬಿದ್ದಿದ್ದರೆ, ಪ್ರಯಾಣಿಕರ ಜೀವಕ್ಕೆ ಕುತ್ತು ಬರುತ್ತಿತ್ತು. ಮಾತ್ರವಲ್ಲದೇ ರಸ್ತೆಯಲ್ಲಿ ಸಂಚರಿಸುತ್ತಿದ್ದ ಇತರೆ ವಾಹನ ಸವಾರರು ಪ್ರಾಣವನ್ನೇ ಕಳೆದುಕೊಳ್ಳಬೇಕಿತ್ತು.

Road accidents in Bengaluru  Vijayanagar

ಅಪಘಾತದಲ್ಲಿ ನಾಲ್ವರಿಗೆ ಗಂಭೀರ ಗಾಯವಾಗಿದ್ದು, ಓರ್ವನ ಸ್ಥಿತಿ ಚಿಂತಾಜನಕವಾಗಿದೆ ಎಂದು ಹೇಳಲಾಗುತ್ತಿದೆ. ಚಾಲಕ ನಿರ್ವಾಹಕ ಸೇರಿದಂತೆ ಆರು ಮಂದಿಗೆ ಗಾಯವಾಗಿದ್ದು, ಅವರನ್ನೆಲ್ಲ ಸ್ಥಳೀಯ ಆಸ್ಪತ್ರೆಗೆ ದಾಖಲು ಮಾಡಲಾಗಿದೆ. ಇನ್ನೂ ಅಪಘಾತದಿಂದಾಗಿ ಹೆದ್ದಾರಿಯಲ್ಲಿ ಸಂಚಾರ ಅಸ್ತವ್ಯಸ್ತವಾಗಿತ್ತು. ಸ್ಥಳಕ್ಕೆ ನೆಲಮಂಗಲ ಸಂಚಾರಿ ಪೋಲಿಸರು ಭೇಟಿ ನೀಡಿ ಪರಿಶೀಲನೆ ನಡೆಸಿದ್ದಾರೆ. ಪಕ್ಕದ ರಸ್ತೆಗೆ ಹಾರಿದ್ದ ಬಸ್‌ ಅನ್ನು ತೆರವುಗೊಳಿಸುತ್ತಿದ್ದಾರೆ.

Road accidents in Bengaluru  Vijayanagar

ಇದನ್ನೂ ಓದಿ: Robbery Case : ಕ್ಯಾಂಟರ್‌ ಅಡ್ಡಗಟ್ಟಿದ ದರೋಡೆಕೋರರು; ಖಾರದ ಪುಡಿ ಎರಚಿ 32 ಲಕ್ಷ ರೂ. ದೋಚಿ ಪರಾರಿ

ವಿಜಯನಗರದಲ್ಲಿ ಬೈಕ್‌ಗಳ ಮುಖಾಮುಖಿ ಡಿಕ್ಕಿ; ಎಗರಿ ಬಿದ್ದ ಬಾಲಕ ಸಾವು

ಬೈಕ್‌ಗಳ ಮುಖಾಮುಖಿ ಡಿಕ್ಕಿಯಾಗಿದ್ದು, ಡಿಕ್ಕಿ ರಭಸಕ್ಕೆ ಬೈಕ್ ಹಿಂದೆ ಕುಳಿತಿದ್ದ ಬಾಲಕ ಎಗರಿ ಬಿದ್ದು ಮೃತಪಟ್ಟಿದ್ದಾನೆ. ಘಟನೆಯಲ್ಲಿ ಮೂವರಿಗೆ ಸಣ್ಣ-ಪುಟ್ಟ ಗಾಯವಾಗಿದೆ. ವಿಜಯನಗರದ ಹರಪನಹಳ್ಳಿ – ಕೂಡ್ಲಿಗಿ ರಸ್ತೆಯ ಹರಾಳು ಕ್ರಾಸ್ ಬಳಿ ಘಟನೆ ನಡೆದಿದೆ. ಕೂಡ್ಲಿಗಿ ತಾಲೂಕಿನ ನಿವಾಸಿ ಮಹಮದ್ (13) ಮೃತ ದುರ್ದೈವಿ.

ಮಹಮದ್‌ ತಂದೆ ಅಸ್ಲಾಂ ಭಾಷಾ ಅವರು ಕೆಎಸ್‌ಆರ್‌ಸಿಟಿ ಬಸ್‌ ಓವರ್ ಟೆಕ್ ಮಾಡಲು ಹೋಗಿದ್ದಾರೆ. ಈ ವೇಳೆ ಬೈಕ್‌ನಲ್ಲಿ ಬರುತ್ತಿದ್ದ ರೇವಣಸಿದ್ದಪ್ಪ ಎಂಬುವವರ ಬೈಕ್‌ಗೆ ಗುದ್ದಿದ್ದಾರೆ. ಪರಿಣಾಮ ಡಿಕ್ಕಿ ರಭಸಕ್ಕೆ ಹಿಂಬದಿ ಕುಳಿತಿದ್ದ ಮಹಮದ್‌ ಹಾರಿ ಬಿದ್ದು ಮೃತಪಟ್ಟಿದ್ದಾನೆ. ಅಸ್ಲಾಂ ಭಾಷಾ, ಮತ್ತೊಬ್ಬ ಪುತ್ರ ಮಹಮದ್ ಫರಾನ್ ಗಾಯವಾಗಿದ್ದು, ಆಸ್ಪತ್ರೆಗೆ ದಾಖಲು ಮಾಡಲಾಗಿದೆ.

ಆದರೆ ಮಹಮದ್‌ ತಾಯಿ ಬಸ್ ಚಾಲಕನನ್ನು ದೂರಿದ್ದಾರೆ. ಬಸ್ ಸ್ಪೀಡ್ ಆಗಿ ಬಂದಾಗ ಬೈಕ್ ಬ್ಯಾಲೆನ್ಸ್ ತಪ್ಪಿ ಮತ್ತೊಂದು ಬೈಕ್‌ಗೆ ಡಿಕ್ಕಿಯಾಗಿದೆ. ಬಸ್‌ ಮಗನಿಗೂ ಡಿಕ್ಕಿ ಹೊಡೆದಿದೆ. ನನ್ನ ಮಗನ ಸಾವಿಗೆ ಬಸ್ ಚಾಲಕ ಶಿವಕುಮಾರ್ ಕೂಡಾ ಕಾರಣ ಎಂದು ದೂರು ದಾಖಲಿಸಿದ್ದಾರೆ. ಸದ್ಯ ಈ ಸಂಬಂಧ ಕೊಟ್ಟೂರು ಪೊಲೀಸ್ ಠಾಣೆಯಲ್ಲಿ ದೂರು ದಾಖಲಾಗಿದೆ.

ಈ ಸಂಗತಿಯ ಕುರಿತು ನಿಮ್ಮ ಅನಿಸಿಕೆ ಏನು? ಕಾಮೆಂಟ್ ಮೂಲಕ ತಿಳಿಸಿ

Continue Reading
Advertisement
viral video
ವೈರಲ್ ನ್ಯೂಸ್3 mins ago

Viral Video: ಛೀ…ಈತನೆಂಥಾ ಕಾಮುಕ! ಸಾರ್ವಜನಿಕ ಸ್ಥಳದಲ್ಲಿ ಈ ಪಾಪಿ ಬಾಲಕಿಗೆ ಮಾಡಿದ್ದೇನು ಗೊತ್ತಾ?

Kalki 2898 AD Keerthy Suresh Lends Her Voice To Bujji Car
ಟಾಲಿವುಡ್8 mins ago

Kalki 2898 AD: ಪ್ರಭಾಸ್‌ ಜೀವನದಲ್ಲಿ ಎಂಟ್ರಿ ಆದ ವ್ಯಕ್ತಿ ಇವರೇನಾ? ಏನದು ʻಬುಜ್ಜಿʼ?

Vijay Sethupathi Starrer Tamil Movie Teaser Released
ಕಾಲಿವುಡ್42 mins ago

Vijay Sethupathi: ವಿಜಯ್ ಸೇತುಪತಿ- ರುಕ್ಮಿಣಿ ವಸಂತ್ ನಟನೆಯ ತಮಿಳು ಸಿನಿಮಾ ಟೀಸರ್‌ ಔಟ್‌!  

Arvind Kejriwal
ದೇಶ53 mins ago

Arvind Kejriwal: “ತಾಕತ್‌ ಇದ್ರೆ ಅರೆಸ್ಟ್‌ ಮಾಡಿ…”; ಪ್ರಧಾನಿ ಮೋದಿಗೆ ಕೇಜ್ರಿವಾಲ್‌ ಓಪನ್‌ ಚಾಲೆಂಜ್‌

Cyber Crime
ಕ್ರೈಂ1 hour ago

Cyber Crime: ಸೈಬರ್ ಕ್ರೈಂ ಜಾಲ ಪತ್ತೆ; ಬಲೆಗೆ ಬಿದ್ದ ಸಿಮ್ ಕಾರ್ಡ್ ಪೂರೈಸುತ್ತಿದ್ದ ವ್ಯಕ್ತಿ

ಸೈಬರ್‌ ಸೇಫ್ಟಿ cyber safety rules
ಅಂಕಣ1 hour ago

ಸೈಬರ್‌ ಸೇಫ್ಟಿ ಅಂಕಣ: ಸ್ಮಾರ್ಟ್‌ ಫೋನಿನ ಸ್ಮಾರ್ಟ್ ಬಳಕೆಗೆ 12 ಸೂತ್ರಗಳು

Swati Maliwal Case
ದೇಶ2 hours ago

Swati Maliwal case: ಸ್ವಾತಿ ಮಲಿವಾಲ್‌ ಹಲ್ಲೆ ಕೇಸ್‌; ಕೇಜ್ರಿವಾಲ್‌ ಆಪ್ತ 5ದಿನ ಪೊಲೀಸ್‌ ಕಸ್ಟಡಿಗೆ

IPL 2024
ಐಪಿಎಲ್ 20242 hours ago

IPL 2024: ರಾಯಲ್‌ ಆಗಿ ಪ್ಲೇ ಆಫ್‌ ಪ್ರವೇಶಿಸಿದ ಬೆಂಗಳೂರು; ಮುಗಿಲು ಮುಟ್ಟಿದ ಸಂಭ್ರಮ

New Criminal Laws
ದೇಶ2 hours ago

New Criminal Laws: ಜುಲೈ 1ರಿಂದ ಜಾರಿಗೆ ಬರಲಿವೆ ಮೂರು ಹೊಸ ಕ್ರಿಮಿನಲ್ ಕಾನೂನುಗಳು; ಏನಿದರ ಹೈಲೈಟ್ಸ್?

IPL 2024
ಕ್ರೀಡೆ2 hours ago

IPL 2024 : ಗೆಲುವೊಂದೇ ಗುರಿ; ಅಂಪೈರ್​ಗಳ ಜತೆ ಮತ್ತೆ ವಾಗ್ವಾದ ನಡೆಸಿದ ಕೊಹ್ಲಿ

Sharmitha Gowda in bikini
ಕಿರುತೆರೆ8 months ago

Geetha Serial Kannada: ನಿದ್ದೆ ಕದ್ದ ಚೋರಿ! ನಟಿ `ಭಾನುಮತಿ’ ಹಾಟ್‌ ಪೋಟೊಗಳಿಗೆ ಫ್ಯಾನ್ಸ್ ಫುಲ್ ಫಿದಾ

Kannada Serials
ಕಿರುತೆರೆ7 months ago

Kannada Serials TRP: 2ನೇ ಸ್ಥಾನದಲ್ಲಿ 2 ಧಾರಾವಾಹಿಗಳು; ಟಿಆರ್‌ಪಿ ರೇಸ್‌ನಲ್ಲಿಲ್ಲ ಭಾಗ್ಯಲಕ್ಷ್ಮೀ!

Bigg Boss- Saregamapa 20 average TRP
ಕಿರುತೆರೆ7 months ago

Kannada Serials TRP: ಏಳನೇ ಸ್ಥಾನಕ್ಕೆ ʻಅಮೃತಧಾರೆʼ ಕುಸಿತ; ಬಿಗ್‌ ಬಾಸ್‌-ಸರಿಗಮಪ ಟಿಆರ್‌ಪಿ ಎಷ್ಟು?

galipata neetu
ಕಿರುತೆರೆ6 months ago

Kanyadana Serial: ಕಿರುತೆರೆಗೆ ಮತ್ತೆ ಎಂಟ್ರಿ ಕೊಟ್ಟ ʻಗಾಳಿಪಟʼ ಖ್ಯಾತಿಯ ʻನೀತುʼ!

Kannada Serials
ಕಿರುತೆರೆ8 months ago

Kannada Serials TRP: ನಾಲ್ಕನೇ ಸ್ಥಾನಕ್ಕೆ ಕುಸಿತ ಕಂಡ ʻಸೀತಾ ರಾಮʼ; ಟಿಆರ್‌ಪಿ ರೇಸ್‌ಗೆ ʻಭಾಗ್ಯಲಕ್ಷ್ಮಿʼ ಬ್ಯಾಕ್‌!

Kannada Serials
ಕಿರುತೆರೆ7 months ago

Kannada Serials TRP: ಟಿಆರ್‌ಪಿಯಲ್ಲಿ ʻಭಾಗ್ಯಲಕ್ಷ್ಮೀʼ ಹವಾ; ʻಪುಟ್ಟಕ್ಕನ ಮಕ್ಕಳುʼ ಧಾರಾವಾಹಿಗೆ ಸಂಕಷ್ಟ!

Bigg Boss' dominates TRP; Sita Rama fell to the sixth position
ಕಿರುತೆರೆ7 months ago

Kannada Serials TRP: ಟಿಆರ್‌ಪಿಯಲ್ಲಿ ʻಬಿಗ್ ಬಾಸ್ʼದೇ ಮೇಲುಗೈ; 6ನೇ ಸ್ಥಾನಕ್ಕೆ ಕುಸಿದ ʻಸೀತಾ ರಾಮʼ

geetha serial Dhanush gowda engagement
ಕಿರುತೆರೆ5 months ago

Dhanush Gowda: ಗೀತಾ ಧಾರಾವಾಹಿ ನಟನ ನಿಶ್ಚಿತಾರ್ಥ; ಭವ್ಯಾಳ ಕಮೆಂಟ್‌ ಬಾಕ್ಸ್‌ ಆಫ್‌!

varun
ಕಿರುತೆರೆ6 months ago

Brindavana Serial: ʼಬೃಂದಾವನʼ ಧಾರಾವಾಹಿಯಲ್ಲಿ ದೊಡ್ಡ ಟ್ವಿಸ್ಟ್‌; ಪ್ರಮುಖ ಪಾತ್ರಧಾರಿಯೇ ಬದಲು

Kannada Serials
ಕಿರುತೆರೆ8 months ago

Kannada Serials TRP: ಟಿಆರ್‌ಪಿಯಲ್ಲಿ ಏರಿಕೆ ಕಂಡ ʻಅಮೃತಧಾರೆʼ; ʻಗಟ್ಟಿಮೇಳʼಕ್ಕೆ ನಾಲ್ಕನೇ ಸ್ಥಾನ!

Prajwal Revanna Case JDS calls CD Shivakumar pen drive gang
ರಾಜಕೀಯ2 days ago

Prajwal Revanna Case: CD ಶಿವಕುಮಾರ್ ಪೆನ್ ಡ್ರೈವ್ ಗ್ಯಾಂಗ್ ಎಂದ ಕುಟುಕಿದ ಜೆಡಿಎಸ್‌!

Karnataka weather Forecast
ಮಳೆ2 days ago

Karnataka Weather : ಮೈಸೂರು, ಮಂಡ್ಯ ಸೇರಿ ಈ 7 ಜಿಲ್ಲೆಗಳಲ್ಲಿ ವ್ಯಾಪಕ ಮಳೆ ಸಂಭವ

Dina Bhavishya
ಭವಿಷ್ಯ2 days ago

Dina Bhavishya : ಈ ರಾಶಿಯ ಪ್ರೇಮಿಗಳಿಗೆ ಮನೆಯಿಂದ ಸಿಗುತ್ತೆ ಗ್ರೀನ್‌ ಸಿಗ್ನಲ್‌

Karnataka Weather Forecast
ಮಳೆ3 days ago

Karnataka Weather : ಭಾರಿ ಮಳೆಗೆ ಕೊಟ್ಟೂರು ಬಸ್ ಸ್ಟ್ಯಾಂಡ್‌ ಜಲಾವೃತ; ‌ ತಾಯಿ-ಮಗ ಗ್ರೇಟ್‌ ಎಸ್ಕೇಪ್‌

Drowned in water
ಹಾಸನ3 days ago

Drowned in water : ಕೆರೆಯಲ್ಲಿ ಈಜಲು ಹೋದ ನಾಲ್ವರು ನೀರುಪಾಲು; ಓರ್ವ ಬಾಲಕ ಪಾರು

Suspicious Case
ಬೆಂಗಳೂರು3 days ago

Suspicious Case : ಬಾತ್‌ ರೂಂನಲ್ಲಿತ್ತು ಕಾಲೇಜು ಹುಡುಗಿ ಡೆಡ್‌ ಬಾಡಿ; ಕುತ್ತಿಗೆ ಕೊಯ್ದು ಸಾಯಿಸಿದವರು ಯಾರು?

Prajwal Revanna Case
ಕರ್ನಾಟಕ4 days ago

Prajwal Revanna Case: ಪ್ರಜ್ವಲ್‌ ರೇವಣ್ಣ ಇಂದೇ ಜರ್ಮನಿಯಿಂದ ಭಾರತಕ್ಕೆ? ಎಸ್‌ಐಟಿ ಅಲರ್ಟ್‌

Dina Bhavishya
ಭವಿಷ್ಯ4 days ago

Dina Bhavishya : ಭೂ ವ್ಯವಹಾರಕ್ಕೆ ಇದು ಸೂಕ್ತ ಸಮಯ; ವ್ಯಾಪಾರದಲ್ಲಿ ಡಬಲ್‌ ಲಾಭ

HD Revanna Released first reaction after release will be acquitted of all charges
ರಾಜಕೀಯ5 days ago

HD Revanna Released: ರಿಲೀಸ್‌ ಬಳಿಕ ರೇವಣ್ಣ ಫಸ್ಟ್‌ ರಿಯಾಕ್ಷನ್;‌ ನ್ಯಾಯಾಂಗದ ಮೇಲೆ ನಂಬಿಕೆ ಇದೆ; ಆರೋಪ ಮುಕ್ತನಾಗುವೆ

CM Siddaramaiah says Our government is stable for 5 years BJP will disintegrate
Lok Sabha Election 20245 days ago

CM Siddaramaiah: ನಮ್ಮ ಸರ್ಕಾರ 5 ವರ್ಷ ಸುಭದ್ರ; ಚುನಾವಣೆ ಬಳಿಕ ಬಿಜೆಪಿ ಛಿದ್ರ ಎಂದ ಸಿಎಂ ಸಿದ್ದರಾಮಯ್ಯ!

ಟ್ರೆಂಡಿಂಗ್‌