MP Pratap Simha : ಕೈ ಶಾಸಕ ತನ್ವೀರ್‌ ಸೇಠ್‌ಗೆ ಅಣ್ಣಾ ಎಂದ ಪ್ರತಾಪ್‌; ಹೌಹಾರಿದ ನೆಟ್ಟಿಗರು! - Vistara News

ಪ್ರಮುಖ ಸುದ್ದಿ

MP Pratap Simha : ಕೈ ಶಾಸಕ ತನ್ವೀರ್‌ ಸೇಠ್‌ಗೆ ಅಣ್ಣಾ ಎಂದ ಪ್ರತಾಪ್‌; ಹೌಹಾರಿದ ನೆಟ್ಟಿಗರು!

MP Pratap Simha : ಟಿಕೆಟ್‌ ವಂಚಿತ ಸಂಸದ ಪ್ರತಾಪ್‌ ಸಿಂಹ ಅವರು ಸಂಕಟದಿಂದ ಹೊರಬಂದಿಲ್ಲ. ಅವರು ನೋವಿನ ಕ್ಷಣದಲ್ಲಿ ಒಳ್ಳೆಯ ಮಾತನಾಡಿದ ತನ್ವೀರ್‌ ಸೇಠ್‌ ಅವರನ್ನು ಅಣ್ಣಾ ಎಂದಿದ್ದಾರೆ. ಇದು ಕುತೂಹಲಕಾರಿ ಚರ್ಚೆಗೆ ಕಾರಣವಾಗಿದೆ.

VISTARANEWS.COM


on

MP Pratap Simha Thanveer sait1
ಮಹತ್ವದ, ಕುತೂಹಲಕರ ಸುದ್ದಿಗಾಗಿ ಫಾಲೊ ಮಾಡಿ
Koo

ಬೆಂಗಳೂರು: ಮೈಸೂರು-ಕೊಡಗು ಲೋಕಸಭಾ ಕ್ಷೇತ್ರದ (Mysore-kodagu Constituency) ಬಿಜೆಪಿ ಟಿಕೆಟ್‌ ಮಿಸ್‌ ಮಾಡಿಕೊಂಡ ಹಾಲಿ ಸಂಸದ ಪ್ರತಾಪ್‌ ಸಿಂಹ (MP Pratap Simha) ಅವರು ಈಗ ಹೊರಗೆ ಕಾಣಿಸಿಕೊಳ್ಳುವುದು ಕಡಿಮೆಯಾಗಿದೆಯಾದರೂ ಸಾಮಾಜಿಕ ಜಾಲತಾಣದಲ್ಲಿ ಸಕ್ರಿಯರಾಗಿದ್ದಾರೆ. ಟಿಕೆಟ್‌ ಸಿಗದ ನೋವು, ಯಾಕೆ ಕೈ ತಪ್ಪಿತು ಎಂಬುದೇ ಇನ್ನೂ ಅರ್ಥವಾಗದ ಸ್ಥಿತಿಯಲ್ಲಿರುವ ಅವರು ಒಂದಿಷ್ಟು ಮನೋಮಂಥನ ನಡೆಸುತ್ತಿರುವಂತೆಯೂ ಕಾಣುತ್ತಿದೆ. ಅದರ ಜತೆಗೆ ಟಿಕೆಟ್‌ ಕೈ ತಪ್ಪಿದ ಬೇಸರದಲ್ಲಿರುವ ತಮ್ಮ ಬಗ್ಗೆ ಅನುಕಂಪದಿಂದ ಮಾತನಾಡುತ್ತಿರುವವ ಬಗ್ಗೆ ಕೃತಜ್ಞತೆ ವ್ಯಕ್ತಪಡಿಸುತ್ತಿದ್ದಾರೆ. ಉಳಿದ ಅಮಿತ್‌ ಶಾ, ನರೇಂದ್ರ ಮೋದಿ ಅವರ ಕಾರ್ಯಕ್ರಮಗಳು, ಬಿಜೆಪಿಯ ಹೇಳಿಕೆಗಳನ್ನು ರಿಟ್ವೀಟ್‌ ಮಾಡುತ್ತಿದ್ದಾರೆ. ಅಂದ ಹಾಗೆ ಟಿಕೆಟ್‌ ಘೋಷಣೆಯಾಗಿ ಮೂರು ದಿನ ಕಳೆದರೂ ಅವರಿನ್ನೂ ಅಭ್ಯರ್ಥಿಯಾಗಿ ಘೋಷಣೆಯಾದ ಯದುವೀರ ಕೃಷ್ಣ ದತ್ತ ಚಾಮರಾಜ ಒಡೆಯರ್‌ (Yaduveer Odeyar) ಅವರನ್ನು ಭೇಟಿಯಾಗಿಲ್ಲ. ಭೇಟಿಗೆ ಅವಕಾಶ ಮಾಡಿಯೂ ಕೊಟ್ಟಿಲ್ಲ.

ಇಷ್ಟೆಲ್ಲದರ ನಡುವೆ ಹಿಂದೂ ಸಾಮ್ರಾಟ್‌ ಎಂದೇ ಕರೆಸಿಕೊಂಡ ಪ್ರತಾಪ್‌ ಸಿಂಹ ಅವರು ನರಸಿಂಹರಾಜ ಕ್ಷೇತ್ರದ ಕಾಂಗ್ರೆಸ್‌ ಶಾಸಕ ತನ್ವೀರ್‌ ಸೇಠ್‌ (MLA Tanveer Sait) ಅವರನ್ನು ತನ್ವೀರ್‌ ಅಣ್ಣಾ (Tanveer Anna) ಎಂದು ಕರೆದಿದ್ದು ಭಾರಿ‌ ಅಚ್ಚರಿಗೆ ಕಾರಣವಾಗಿದೆ. ನೆಟ್ಟಿಗರಲ್ಲಿ ಕೆಲವರು ಹೀಗೂ ಉಂಟೇ ಎಂದು ಹೌಹಾರಿದ್ದಾರೆ.

ಇದನ್ನೂ ಓದಿ :MP Pratap Simha : ಯದುವೀರ್‌ ಆ್ಯಕ್ಟಿವ್‌ ಆಗುತ್ತಿದ್ದಂತೆಯೇ ಸಿಂಹ ಸೈಲೆಂಟ್‌?; ಭೇಟಿಗೂ ಮಿಸ್‌!

MP Pratap Simha ತನ್ವೀರ್‌ ಸೇಠ್‌ ಅವರನ್ನು ಅಣ್ಣಾ ಎಂದು ಕರೆದಿದ್ದು ಯಾಕೆ?

ಪ್ರತಾಪ್‌ ಸಿಂಹ ಅವರು ಹಿಂದುತ್ವದ ಪ್ರಬಲ ಪ್ರತಿಪಾದಕರಾಗಿದ್ದು, ಹನುಮ ಜಯಂತಿ ಮತ್ತಿತರ ಹೋರಾಟಗಳಲ್ಲಿ ಮುಂಚೂಣಿಯಲ್ಲಿದ್ದರು. ಮೈಸೂರಿನಲ್ಲಿ ಹೊಸದಾಗಿ ಕಟ್ಟಿದ ಬಸ್‌ ಸ್ಟಾಪ್‌ಗಳು ಗುಂಬಜ್‌ನಂತೆ ಕಾಣುತ್ತಿವೆ ಎಂದು ಪ್ರತಿಭಟನೆಯ ಹುಯಿಲೆಬ್ಬಿಸಿದವರು. ಅಂಥವರು ಈಗ ತನ್ವೀರ್‌ ಸೇಠ್‌ಗೆ ತಮ್ಮ ಹೇಗಾದರು ಅಂತ ನೋಡುವುದಾದರೆ..

ಪ್ರತಾಪ್‌ ಸಿಂಹ ಅವರಿಗೆ ಮೈಸೂರು -ಕೊಡಗು ಕ್ಷೇತ್ರದ ಟಿಕೆಟ್‌ ಕೈ ತಪ್ಪಿ ಅದು ರಾಜವಂಶಸ್ಥ ಯದುವೀರ್‌ ಕೃಷ್ಣದತ್ತ ಚಾಮರಾಜ ಒಡೆಯರ್‌ ಅವರ ಪಾಲಾಗಿತ್ತು. ಈ ವೇಳೆ ಶಾಸಕ ತನ್ವೀರ್‌ ಸೇಠ್‌ ಅವರು ಪತ್ರಿಕೆಯೊಂದಕ್ಕೆ ಪ್ರತಿಕ್ರಿಯೆ ನೀಡಿದ್ದರು.

ʻʻರಾಜಕಾರಣದಲ್ಲಿ ಏನೆಲ್ಲ ಆಗುತ್ತದೆ ಎಂಬುದಕ್ಕೆ ಪ್ರತಾಪ್‌ ಸಿಂಹಗೆ ಬಿಜೆಪಿ ಟಿಕೆಟ್‌ ಕೈ ತಪ್ಪಿರುವುದೇ ಉದಾಹರಣೆ. ಪ್ರತಾಪ್‌ ಸಿಂಹ ನನ್ನ ಆತ್ಮೀಯ ಸ್ನೇಹಿತ. ಅವರಿಗೆ ಈ ಬಾರಿಯೂ ಬಿಜೆಪಿ ಟಿಕೆಟ್‌ ಸಿಗುತ್ತದೆ ಎಂದು ನಾನು ನಿರೀಕ್ಷೆ ಮಾಡಿದ್ದೆ. ಆದರೆ, ಪ್ರತಾಪ್‌ ಸಿಂಹಗೆ ಟಿಕೆಟ್‌ ಕೈ ತಪ್ಪಿರುವುದು ಅನಿರೀಕ್ಷಿತ. ರಾಜಕಾರಣದಲ್ಲಿ ಏನೆಲ್ಲಾ ಆಗಬಹುದು ಎಂಬುದಕ್ಕೆ ಉದಾಹರಣೆ ನನ್ನ ಕಣ್ಣ ಮುಂದೆ ಇದೆ. ಈಗ ಪ್ರತಾಪ್‌ ಸಿಂಹಗೆ ಟಿಕೆಟ್‌ ಸಿಕ್ಕಿಲ್ಲ. ಆದರೆ ಅವರಿಗೆ ಒಳ್ಳೆಯದಾಗಲಿ ಎಂದು ಆಶಿಸುತ್ತೇನೆ – ಎಂದು ತನ್ವೀರ್‌ ಸೇಠ್‌ ಹೇಳಿದ್ದರು.

MP Pratap Simha Tanveer Sait

ತನ್ವೀರ್‌ ಸೇಠ್‌ ಅವರ ಈ ಪ್ರತಿಕ್ರಿಯೆಯನ್ನು ಸಂಸದ ಪ್ರತಾಪ್‌ ಸಿಂಹ ಅವರು ಟ್ವೀಟ್‌ ಮಾಡಿ `THANKS Thaveer Anna’)’ ಎಂದು ಬರೆದಿದ್ದರು. ಅನ್ಯ ಪಕ್ಷದ ಒಬ್ಬ ನಾಯಕನಾಗಿದ್ದರೂ ನನ್ನ ಬಗ್ಗೆ ಅನುಕಂಪ ಹೊಂದಿದ್ದಾರಲ್ಲಾ ಎಂಬ ಕೃತಜ್ಞತಾ ಭಾವ ಅವರಲ್ಲಿತ್ತು.

MP Pratap Simha ಇದಕ್ಕೆ ನೆಟ್ಟಿಗರು ಏನಂದರು?

ಪ್ರತಾಪ್‌ ಸಿಂಹ ಅವರ ಈ ಟ್ವೀಟ್‌ಗೆ ಹೆಚ್ಚಿನವರು ತಾಳ್ಮೆ ಕಳೆದುಕೊಳ್ಳಬೇಡಿ, ಇನ್ನೂ ಭವಿಷ್ಯವಿದೆ ಎಂದು ಬುದ್ಧಿಮಾತು ಹೇಳಿದ್ದಾರೆ. ಅದರ ಜತೆಗೆ ಕೆಲವರು ಪ್ರತಾಪ್‌ ಸಿಂಹ ಕಾಲೆಳೆದಿದ್ದಾರೆ.

ಪ್ರತಾಪ್ ಸಿಂಹ ರವರೆ, ನಿಮಗೆ MP ಟಿಕೆಟ್ ಸಿಕ್ಕಲ್ಲ ಅಂತಾ ನಿರಾಶರಾಗಬೇಡಿ. ನೀಮಗೆ ಇನ್ನೂ ಮುಂದೆ ಭವಿಷ್ಯವಿದೆ ರಾಜ್ಯಕ್ಕೆ ನಿಮ್ಮಂತಹ ಯುವಕರು ಬೇಕು. ಯಾವುದಕ್ಕೂ ತಾಳ್ಮೆ ಬೇಕು. ಈ ತರಹ X ನಲ್ಲಿ ಅನುಕಂಪ ಬರುತ್ತದೆ. ಅನ್ನೋದು ತೆಗೆದು ಹಾಕಿ. ಇನ್ನು ಮಂದೆ ಪಕ್ಷ ನಿಮಗೆ ಒಳ್ಳೆಯ ಜವಾಬ್ದಾರಿ ಕೊಡುತ್ತಾರೆ. ತಾಳ್ಮೆ ಇರಲಿ ಎಂದು ಒಬ್ಬರು ಕಮೆಂಟ್‌ ಮಾಡಿದ್ದಾರೆ.

ಇನ್ನೊಬ್ಬರು ʻʻThanks ಹೇಳುದ್ರ? ಅದು ತನ್ವಿರ್ ಗೆ? ಅದು ಸಾಬ್ರು ಗೆ? ಹೆಂಗೆ ಗುರು ನೀವು?? ಮುಸ್ಲಿಂ ನಾ ಅಣ್ಣ ಅಂತ ಹೇಳ್ತಾ ಇದ್ದೀರಾ?? ನಿಜಾ ನಾ?ʼʼ ಎಂದು ಕೇಳಿದ್ದಾರೆ.

ನೀವು ಮತಕ್ಕಾಗಿ ಧರ್ಮ, ಕೋಮುವಾದ ಬಳಸಿಕೊಂಡವರು

ಒಬ್ಬ ಮುಸ್ಲಿಂ ನಿಮ್ಮ ಬಗ್ಗೆ ಕನಿಕರ ವ್ಯಕ್ತ ಪಡಿಸುತ್ತಿದ್ದಾರೆ, ಆದರೆ ನೀವಾದರೋ ಮತಗಳಾಗಿ ಧರ್ಮ ಮತ್ತು ಕೋಮುವಾದವನ್ನು ಬಳಸಿಕೊಂಡವರು. ಮೇಲೆ ಹೋದವನು ಕೆಳಗೆ ಇಳಿಯಲೇ ಬೇಕು. ಬದಲಾವಣೆ ಜಗದ ನಿಯಮ… ಧರ್ಮ ಒಂದು ದಿನ ತನ್ನ ಇರುವಿಕೆಯನ್ನು ತೋರಿಸುತ್ತದೆ. ಕಾಯಬೇಕು ಅಷ್ಟೇ.. ನಿಮ್ಮ ಸಮಯ ಬರುತ್ತಾ ಇದೆ.. ಎಂದು ಲಾರೆನ್ಸ್‌ ಮಿರಾಂಡ ಹೇಳಿದ್ದಾರೆ.

ಅಧಿಕ ಪ್ರಸಂಗಿ ಎಂದು ಹೆಸರಿಟ್ಟುಕೊಂಡಿರುವ ಇನ್ನೊಬ್ಬರು, ಹಾಗಾದರೆ, ನೀವಿಬ್ಬರೂ ಆತ್ಮೀಯ ಸ್ನೇಹಿತರಾಗಿದ್ದುಕೊಂಡೇ ಮೈಸೂರು-ಕೊಡಗು ಜನರಿಗೆ ಹಿಂದೂ- ಮುಸ್ಲಿಂ, ಟಿಪ್ಪು ಹನುಮ ಜಯಂತಿ ಮಹಿಷಾಸುರ ಅಂತ ಕೋಮು ವಿಷ ಹರಡ್ತಾ ಇದ್ರೀ? ಛೇ.. ನರೇಂದ್ರ ಮೋದಿ ಅವರಿಗೆ ಧನ್ಯವಾದಗಳು ನಿಮಗೆ ಟಿಕೆಟ್ ಕೊಡದೇ ಇದ್ದಿದ್ದಕ್ಕೆ. ಎಂದು ಕಾಲೆಳೆದಿದ್ದಾರೆ.

ಸೋತೆನೆಂದೆನಬೇಡ.. ಮತ್ತೆ ತೋರ್ಪುದು ನಾಳೆ.. ಪ್ರತಾಪ್‌ ಸಿಂಹಗೆ ಮಂಕುತಿಮ್ಮನ ನೆನಪು

ಇದೇ ವೇಳೆ ಟಿಕೆಟ್‌ ಕೈ ತಪ್ಪಿರುವುದರಿಂದ ಮಂಕಾಗಿರುವ ಪ್ರತಾಪ್‌ ಸಿಂಹ ಅವರು ಮಂಕು ತಿಮ್ಮನನ್ನು ನೆನಪಿಸಿಕೊಂಡಿದ್ದಾರೆ. ಡಿವಿಜಿ ಅವರ ಕಗ್ಗವೊಂದನ್ನು ಭಾವಾರ್ಥ ಸಹಿತ ಟ್ವೀಟ್‌ ಮಾಡಿರುವ ಅವರು ʻಸತ್ತೆನೆಂದೆನಬೇಡ, ಸೋತೆನೆಂದೆನಬೇಡʼ ಎಂದು ತನಗೆ ತಾನೇ ಸಾಂತ್ವನ ಹೇಳಿಕೊಂಡಿದ್ದಾರೆ.

ಸತ್ತೆನೆಂದೆನಬೇಡ, ಸೋತೆನೆಂದೆನಬೇಡ, ಬತ್ತಿತೆನ್ನೊಳು ಸತ್ತ್ವದೂಟೆಯೆನಬೇಡ
ಮೃತ್ಯುವೆನ್ನುವುದೊಂದು ತೆರೆಯಿಳಿತ, ತೆರೆಯೇರು, ಮತ್ತೆ ತೋರ್ಪುದು ನಾಳೆ
ಸೋಲು ಗೆಲುವು ಸ್ವಾಭಾವಿಕವೇ, ಒಂದು ಸೋಲಾಗಬಹುದು
ಒಂದು ಸಲ ಗೆಲುವಾಗಬಹುದು, ಇಂದು ಬಿದ್ದ ಅಲೆ ನಾಳೆ ಏಳುತ್ತದೆ
ಇಂದು ಬಂದ ಸೋಲು ನಾಳೆ ಗೆಲುವಾಗುತ್ತದೆ

ಎಂದು‌ ಎಕ್ಸ್‌ನಲ್ಲಿ ಪೋಸ್ಟ್‌ ಮಾಡಿದ್ದಾರೆ ಪ್ರತಾಪ್‌ ಸಿಂಹ.

ಅದರ ಅರ್ಥವನ್ನೂ ಅಲ್ಲೇ ವಿವರಿಸಲಾಗಿದೆ: ಬ್ರಹ್ಮವಸ್ತುವು ಆನಂದಪಡುವುದಕ್ಕೋಸ್ಕರ ಪ್ರಕೃತಿಯ ಮೂಲಕವಾಗಿ ಆಟವನ್ನು ನಡೆಸುತ್ತಿದೆ. ತ್ರಿಗುಣಗಳ ವ್ಯತ್ಯಾಸದಿಂದ ಸೋಲು, ಗೆಲವು ಸ್ವಾಭಾವಿಕವೇ. ಈ ಲೀಲೆ ಸತತವಾಗಿ ಕೊನೆಯಿಲ್ಲದೆ ನಡೆಯುತ್ತಿರುವುದರಿಂದ ಇಲ್ಲಿ ಒಂದು ಸಲ ಸೋಲಾಗಬಹುದು, ಇನ್ನೊಂದು ಸಲ ಗೆಲುವಾಗಬಹುದು. ಆದದ್ದರಿಂದ ಈ ತತ್ತ್ವವನ್ನು ಮನದಟ್ಟು ಮಾಡಿಕೊಂಡು, ನನ್ನ ಜೀವನ ಕೆಟ್ಟಿತು, ನಾನು ಸಾಧಿಸಬೇಕಾದದ್ದನ್ನು ಸಾಧಿಸದೆಯೇ ಸಾಯುತ್ತಿದ್ದೇನೆ, ನಾನು ಸೋತೆ. ನನ್ನ ಒಳಸತ್ಯ ಬತ್ತಿಹೋಗಿದೆ, ನಾನು ಕೆಲಸಕ್ಕೆ ಬಾರದವನಾದೆ ಎಂದು-ನಿರಾಸೆಯ ಮನೋಭಾವವನ್ನು ತಳೆಯುವುದು ತಪ್ಪು ಎನ್ನುತ್ತಾರೆ ತಿಮ್ಮಗುರು.

ಮೃತ್ಯು ಎಂಬುದು ಒಂದು ಅಲೆಯಂತೆ, ಅಲೆ ಮೇಲೇಳುತ್ತದೆ ಮತ್ತೆ ಬೀಳುತ್ತದೆ, ಇನ್ನೊಂದು ಸಲ ಏಳುತ್ತದೆ. ಹೀಗೆ ನಮ್ಮ ಜೀವನ ಒಂದೇ ಜನ್ಮದಲ್ಲಿ ಮುಗಿದುಹೋಗುವುದಿಲ್ಲ. ಇಂದು ಬಿದ್ದ ಅಲೆ ನಾಳೆ ಏಳುತ್ತದೆ. ಇಂದು ಬಂದ ಸೋಲು ನಾಳೆ ಗೆಲುವಾಗುತ್ತದೆ ಎನ್ನುತ್ತದಂತೆ ಈ ಕಗ್ಗ.. ಅಚ್ಚರಿ ಎಂದರೆ ಹಿಂದೊಮ್ಮೆ ಸಿ.ಟಿ. ರವಿ ಕೂಡಾ ಹಿಂದೆ ಇದೇ ಸಾಲು ನೆನಪಿಸಿಕೊಂಡಿದ್ದರು.

ಕ್ಷಣ ಕ್ಷಣದ ಮಾಹಿತಿಗಾಗಿ Vistara News FaceBook ಪೇಜ್ ಫಾಲೋ ಮಾಡಿ
ಮಹತ್ವದ ಮಾಹಿತಿಗಾಗಿ ವಿಸ್ತಾರ ನ್ಯೂಸ್ ಆ್ಯಪ್ ಉಚಿತವಾಗಿ ಡೌನ್ ಲೋಡ್ ಮಾಡಿಕೊಳ್ಳಿ: Andriod App | IOS App
Continue Reading
Click to comment

Leave a Reply

Your email address will not be published. Required fields are marked *

ದೇಶ

Arvind Kejriwal: ಕಾಂಗ್ರೆಸ್‌ ಜತೆ ನಮ್ಮ ‘ಮದುವೆ’ ಶಾಶ್ವತ ಅಲ್ಲ ಎಂದ ಕೇಜ್ರಿವಾಲ್;‌ ‘ಡಿವೋರ್ಸ್‌’ ಯಾವಾಗ?

Arvind Kejriwal: ಕಾಂಗ್ರೆಸ್‌ ಜತೆ ನಾವೇನು ಕಾಯಂ ಮದುವೆ ಮಾಡಿಕೊಂಡಿಲ್ಲ. ಈಗ ಬಿಜೆಪಿಯನ್ನು ಸೋಲಿಸುವುದಷ್ಟೇ ನಮ್ಮ ಗುರಿಯಾಗಿದೆ. ಸರ್ವಾಧಿಕಾರ ಹಾಗೂ ಗೂಂಡಾಗಿರಿಯನ್ನು ನಿರ್ಮೂಲನೆ ಮಾಡುವ ದಿಸೆಯಲ್ಲಿ ನಾವು ಕಾಂಗ್ರೆಸ್‌ ಜತೆ ಮೈತ್ರಿ ಮಾಡಿಕೊಂಡಿದ್ದೇವೆ. ದೇಶವನ್ನು ಉಳಿಸುವುದು ನಮಗೆ ಮುಖ್ಯ ಉದ್ದೇಶವಾಗಿದೆ ಎಂಬುದಾಗಿ ಅರವಿಂದ್‌ ಕೇಜ್ರಿವಾಲ್‌ ಅವರು ಸಂದರ್ಶನದಲ್ಲಿ ತಿಳಿಸಿದ್ದಾರೆ. ಇದು ಈಗ ಭಾರಿ ಸಂಚಲನ ಮೂಡಿಸಿದ್ದಾರೆ.

VISTARANEWS.COM


on

Arvind Kejriwal
Koo

ನವದೆಹಲಿ: ಬಿಜೆಪಿ ನೇತೃತ್ವದ ಎನ್‌ಡಿಎ ಸರ್ಕಾರವನ್ನು ಶತಾಯ ಗತಾಯ ಅಧಿಕಾರದಿಂದ ಕೆಳಗಿಳಿಸಬೇಕು ಎಂದು ಪ್ರತಿಪಕ್ಷಗಳು ಒಗ್ಗೂಡಿ ರಚಿಸಿರುವ ಇಂಡಿಯಾ ಒಕ್ಕೂಟದಲ್ಲಿ (India Bloc) ಆರಂಭದಿಂದಲೂ ಭಿನ್ನಮತ, ಭಿನ್ನಾಭಿಪ್ರಾಯ ತಲೆದೋರುತ್ತಿವೆ. ನಿತೀಶ್‌ ಕುಮಾರ್‌ (Nitish Kumar) ಇಂಡಿಯಾ ಒಕ್ಕೂಟ ತೊರೆದಿದ್ದು, ಪಶ್ಚಿಮ ಬಂಗಾಳದಲ್ಲಿ ಟಿಎಂಸಿ ಏಕಾಂಗಿಯಾಗಿ ಸ್ಪರ್ಧಿಸಿದ್ದೇ ಇದಕ್ಕೆ ನಿದರ್ಶನಗಳಾಗಿವೆ. ಇದರ ಬೆನ್ನಲ್ಲೇ, ದೆಹಲಿ ಮುಖ್ಯಮಂತ್ರಿ ಅರವಿಂದ ಕೇಜ್ರಿವಾಲ್‌ (Arvind Kejriwal) ಅವರು ಮಹತ್ವದ ಹೇಳಿಕೆ ನೀಡಿದ್ದಾರೆ. “ಕಾಂಗ್ರೆಸ್‌ ಜತೆಗಿನ ನಮ್ಮ ಮದುವೆಯು (ಆಪ್‌-ಕಾಂಗ್ರೆಸ್‌ ಮೈತ್ರಿ) (AAP Congress Alliance) ಶಾಶ್ವತ ಅಲ್ಲ” ಎಂದು ಹೇಳುವ ಮೂಲಕ ಮೈತ್ರಿ ಮುರಿದುಕೊಳ್ಳುವ ಸೂಚನೆ ನೀಡಿದ್ದಾರೆ.

ಇಂಡಿಯಾ ಟುಡೇ ಸುದ್ದಿಸಂಸ್ಥೆಗೆ ನೀಡಿದ ಸಂದರ್ಶನದ ವೇಳೆ ಅರವಿಂದ್‌ ಕೇಜ್ರಿವಾಲ್‌ ಅವರು ಹೀಗೆ ಹೇಳಿದ್ದಾರೆ. “ಕಾಂಗ್ರೆಸ್‌ ಜತೆ ನಾವೇನು ಕಾಯಂ ಮದುವೆ ಮಾಡಿಕೊಂಡಿಲ್ಲ. ಈಗ ಬಿಜೆಪಿಯನ್ನು ಸೋಲಿಸುವುದಷ್ಟೇ ನಮ್ಮ ಗುರಿಯಾಗಿದೆ. ಸರ್ವಾಧಿಕಾರ ಹಾಗೂ ಗೂಂಡಾಗಿರಿಯನ್ನು ನಿರ್ಮೂಲನೆ ಮಾಡುವ ದಿಸೆಯಲ್ಲಿ ನಾವು ಕಾಂಗ್ರೆಸ್‌ ಜತೆ ಮೈತ್ರಿ ಮಾಡಿಕೊಂಡಿದ್ದೇವೆ. ದೇಶವನ್ನು ಉಳಿಸುವುದು ನಮಗೆ ಮುಖ್ಯ ಉದ್ದೇಶವಾಗಿದೆ. ಬಿಜೆಪಿಯನ್ನು ಸೋಲಿಸುವ ದೃಷ್ಟಿಯಿಂದ ಮಾತ್ರ ನಾವು ಮೈತ್ರಿ ಮಾಡಿಕೊಂಡಿದ್ದೇವೆ” ಎಂದು ಹೇಳಿರುವುದು ಭಾರಿ ಸಂಚಲನ ಮೂಡಿಸಿದೆ.

ಸಿಎಂ ಸ್ಥಾನಕ್ಕೆ ರಾಜೀನಾಮೆ ನೀಡಲ್ಲ

ಅಬಕಾರಿ ನೀತಿ ಜಾರಿ ವೇಳೆ ಹಗರಣ ನಡೆದಿದೆ ಎನ್ನಲಾದ ಪ್ರಕರಣದಲ್ಲಿ ಜೈಲುಪಾಲಾಗಿದ್ದು, ಮುಖ್ಯಮಂತ್ರಿ ಸ್ಥಾನಕ್ಕೆ ರಾಜೀನಾಮೆ ನೀಡಬೇಕು ಎಂಬುದಾಗಿ ಬಿಜೆಪಿ ಆಗ್ರಹಿಸುತ್ತಿದೆ. ಇದರ ಕುರಿತು ಪ್ರತಿಕ್ರಿಯಿಸಿದ ಅವರು, “ಬಿಜೆಪಿ ಹೇಳಿತು ಎಂದ ಮಾತ್ರಕ್ಕೆ ಸಿಎಂ ಸ್ಥಾನಕ್ಕೆ ರಾಜೀನಾಮೆ ನೀಡುವುದಿಲ್ಲ. ಮುಖ್ಯಮಂತ್ರಿ ಸ್ಥಾನಕ್ಕೆ ರಾಜೀನಾಮೆ ನೀಡುವ ಪ್ರಶ್ನೆಯೇ ಇಲ್ಲ. ಅಷ್ಟಕ್ಕೂ, ನಾನು ಜೈಲಿಗೆ ಹೋಗುತ್ತೇನೆ ಎಂಬುದು ಮುಖ್ಯ ವಿಷಯವಲ್ಲ. ದೇಶದ ಭವಿಷ್ಯದ ಬಗ್ಗೆ ನನಗೆ ಚಿಂತೆ ಇದೆ. ಅವರಿಗೆ ಎಷ್ಟು ದಿನ ಬೇಕೋ, ಅಷ್ಟು ದಿನ ನನ್ನನ್ನು ಜೈಲಿನಲ್ಲಿ ಇರಿಸಲಿ. ನಾವು ಯಾವುದೇ ಕಾರಣಕ್ಕೂ ಕುಗ್ಗುವುದಿಲ್ಲ, ಹೋರಾಟ ನಿಲ್ಲಿಸಲ್ಲ” ಎಂದಿದ್ದಾರೆ. ಕೇಜ್ರಿವಾಲ್‌ ಅವರು ಜೂನ್‌ 2ರಂದು ಮತ್ತೆ ಜೈಲಿಗೆ ಹೋಗಲಿದ್ದಾರೆ.

ಇಂಡಿಯಾ ಒಕ್ಕೂಟದ ಸಭೆಗೆ ದೀದಿ ಗೈರು

ಲೋಕಸಭೆ ಚುನಾವಣೆ ಕೊನೆಯ ಹಂತಕ್ಕೆ ಬಂದು ನಿಂತಿದೆ. ಆರು ಹಂತಗಳ ಮತದಾನ ಮುಕ್ತಾಯಗೊಂಡಿದ್ದು, ಜೂನ್‌ 1ರಂದು ಏಳನೇ ಅಥವಾ ಕೊನೆಯ ಹಂತದ ಮತದಾನದ ಮೂಲಕ ಸಾರ್ವತ್ರಿಕ ಚುನಾವಣೆ ಮುಗಿಯಲಿದೆ. ಇನ್ನು, ಕೊನೆಯ ಹಂತದ ಮತದಾನದ ದಿನವಾದ ಜೂನ್‌ 1ರಂದೇ ಇಂಡಿಯಾ ಒಕ್ಕೂಟದ ಪಕ್ಷಗಳ ಸಭೆ ನಡೆಯಲಿದೆ. ಆದರೆ, ಇಂಡಿಯಾ ಒಕ್ಕೂಟದ ಮಹತ್ವದ ಸಭೆಗೆ ಗೈರಾಗಲು ಪಶ್ಚಿಮ ಬಂಗಾಳ ಮುಖ್ಯಮಂತ್ರಿ ಮಮತಾ ಬ್ಯಾನರ್ಜಿ ತಿಳಿಸಿದ್ದಾರೆ. ಇದು ಕೂಡ ಈಗ ಭಾರಿ ಚರ್ಚೆಗೆ ಕಾರಣವಾಗಿದೆ.

ಇದನ್ನೂ ಓದಿ: Arvind Kejriwal: ಜಾಮೀನು ಅವಧಿ ವಿಸ್ತರಣೆಗೆ ಕೋರಿ ಅರ್ಜಿ; ಸುಪ್ರೀಂನಲ್ಲಿ ಕೇಜ್ರಿವಾಲ್‌ಗೆ ಭಾರೀ ಹಿನ್ನಡೆ-ಮತ್ತೆ ಜೈಲು ಫಿಕ್ಸ್‌!

Continue Reading

ಪ್ರಮುಖ ಸುದ್ದಿ

Love Jihad: ಲವ್ ಜಿಹಾದ್ ತಡೆಗೆ ಹೆಲ್ಪ್‌ಲೈನ್‌ ಆರಂಭಿಸಿದ ಶ್ರೀರಾಮಸೇನೆ

Love Jihad: ರಾಜ್ಯದ ಯಾವುದೇ ಹಿಂದು ಯುವತಿಯರಿಗೆ ಅನ್ಯ ಧರ್ಮದವರು ತೊಂದರೆ ನೀಡಿದರೆ ಸಹಾಯವಾಣಿಗೆ ಕರೆ ಮಾಡಬಹುದು ಎಂದು ಶ್ರೀರಾಮ್ ಸೇನೆ ತಿಳಿಸಿದೆ.

VISTARANEWS.COM


on

Love Jihad
Koo

ಹುಬ್ಬಳ್ಳಿ: ರಾಜ್ಯದಲ್ಲಿ ಇತ್ತೀಚೆಗೆ ಲವ್ ಜಿಹಾದ್ ಪ್ರಕರಣಗಳು (Love Jihad) ಹೆಚ್ಚಾಗುತ್ತಿರುವ ಹಿನ್ನೆಲೆಯಲ್ಲಿ ಹಿಂದು ಯುವತಿಯರ ರಕ್ಷಣೆಗೆ ಶ್ರೀ ರಾಮಸೇನೆಯಿಂದ ಸಹಾಯವಾಣಿ ಆರಂಭಿಸಲಾಗಿದೆ. ರಾಜ್ಯದ ಯಾವುದೇ ಹಿಂದು ಯುವತಿಯರಿಗೆ ಅನ್ಯ ಧರ್ಮದವರು ತೊಂದರೆ ನೀಡಿದರೆ ಸಹಾಯವಾಣಿಗೆ ಕರೆ ಮಾಡಬಹುದು ಎಂದು ಶ್ರೀರಾಮ್ ಸೇನೆ ತಿಳಿಸಿದೆ.

ನಗರದ ಕ್ಯುಬಿಕ್ಸ್‌ ಹೋಟೆಲ್‌ನಲ್ಲಿ ಲವ್ ಜಿಹಾದ್ ಜಾಗೃತಿಗಾಗಿ ಸಹಾಯವಾಣಿಗೆ (9090443444) ಶ್ರೀರಾಮ ಸೇನೆ ಮುಖ್ಯಸ್ಥ ಪ್ರಮೋದ್ ಮುತಾಲಿಕ್‌ ಅವರು ಚಾಲನೆ ನೀಡಿದರು. ಕಾರ್ಯಕ್ರಮದಲ್ಲಿ ನೇಹಾ ಹಿರೇಮಠ ಕುಟುಂಬಸ್ಥರು, ಉತ್ತರ ಕರ್ನಾಟಕ ಭಾಗದ ವಿವಿಧ ಜಿಲ್ಲೆಗಳ ಶ್ರೀರಾಮಸೇನೆ ಪದಾಧಿಕಾರಿಗಳು ಭಾಗಿಯಾಗಿದ್ದರು.

ಈ ವೇಳೆ ಶ್ರೀರಾಮಸೇನೆ ಮುಖ್ಯಸ್ಥ ಪ್ರಮೋದ್ ಮುತಾಲಿಕ್ ಮಾತನಾಡಿ, ಪ್ರೀತಿ ಪ್ರೇಮದ ಹೆಸರಲ್ಲಿ ಹಿಂದು ಹೆಣ್ಮಕ್ಕಳ ಮತಾಂತರ, ಅತ್ಯಾಚಾರ ನಡೆಯುತ್ತಿದೆ. ಘಜ್ನಿ, ಘೋರಿ, ಟಿಪ್ಪು ಸುಲ್ತಾನ್‌ವರೆಗೂ ಈ ಪ್ರಕ್ರಿಯೆ ಚಾಲನೆಯಲ್ಲಿದೆ. ಹಿಂದು ಯುವತಿಯರಿಗಾಗಿ ನಾವು ಸಹಾಯವಾಣಿ ಉದ್ಘಾಟನೆ ಮಾಡಿದ್ದೇವೆ. ಯಾವುದೇ ಸಮಸ್ಯೆ ಇದ್ದರೂ ನಮಗೆ ತಿಳಿಸಬೇಕು, ನಾವು 24 ಗಂಟೆಯಲ್ಲಿ ಸಮಸ್ಯೆ ಬಗೆಹರಿಸುತ್ತೇವೆ. ಹಿಂದು ಹೆಣ್ಮಕ್ಕಳು ಸಾಯಬೇಡಿ, ನೀವು ಸಾಯಿಸೋ ಯೋಚನೆ ಮಾಡಬೇಕು. ನಾವು ನಿಮಗೆ ಟ್ರೇನಿಂಗ್ ಕೊಡ್ತೀವಿ, ಕ್ರೂರತನಕ್ಕೆ ಅಲ್ಲೆ ಉತ್ತರ ಕೊಡಬೇಕು. ಹಾಡಹಗಲೇ ನೇಹಾ ಕೊಲೆಯಾಗುತ್ತೆ ಅಂದ್ರೆ ಅವರಿಗೆ ಎಷ್ಟು ಟ್ರೈನಿಂಗ್ ‌ಕೊಟ್ಟಿರಬೇಕು ಎಂದು ಕಿಡಿಕಾರಿದರು.

ಕಾಂಗ್ರೆಸ್ ನಾಯಕರೇ ನೀವು ಮುಸ್ಲಿಂ ಮತಗಳಿಗಾಗಿ ಜೊಲ್ಲು ಸುರಿಸಬೇಡಿ. ಮುಸ್ಲಿಂ ಯುವಕರು ನಿಮ್ಮ ಹೆಣ್ಣುಮಕ್ಕಳನ್ನೂ ಬಿಡೋದಿಲ್ಲ. ಸರ್ಕಾರ, ರಾಜಕಾರಣಿಗಳು ಫೇಲ್ ಆಗಿದ್ದಕ್ಕೆ ನಾವು ಇದಕ್ಕೆ ಮುಂದಾಗಿದ್ದೇವೆ. ಹೌದು, ಇದು ನೈತಿಕ ಪೋಲಿಸ್ ಗಿರಿ. ಸರ್ಕಾರ ನೈತಿಕತೆ ಕಳೆದುಕೊಂಡಿದೆ. ಹೀಗಾಗಿ ನಾವು ನೈತಿಕ ಪೊಲೀಸ್ ಗಿರಿ ಆರಂಭಿಸಿದ್ದೇವೆ. ನಾವು ಹಿಂದು ಹೆಣ್ಣುಮಕ್ಕಳಿಗೆ ಬರೀ ತ್ರಿಶೂಲ ಮಾತ್ರ ಅಲ್ಲಾ, ಗನ್, ಲಾಂಗ್ ಮಚ್ಚು ಟ್ರೈನಿಂಗ್ ನೀಡುತ್ತೇವೆ ಎಂದು ತಿಳಿಸಿದರು.

ಇದನ್ನೂ ಓದಿ ಅಧಿಕಾರಕ್ಕೆ ಬಂದ್ರೆ ನಿಮ್ಮ ಖಾತೆಗೆ ಟಕಾಟಕ್ 1 ಲಕ್ಷ ಎಂದಿದ್ದ ರಾಹುಲ್ ಗಾಂಧಿ! ಪೋಸ್ಟ್ ಆಫೀಸ್ ಮುಂದೆ ಮುಸ್ಲಿಂ ಮಹಿಳೆಯರ ನೂಕುನುಗ್ಗಲು!!

ಹುಬ್ಬಳ್ಳಿಯಲ್ಲಿ ಮಾತ್ರವಲ್ಲದೇ ದಾವಣಗೆರೆ, ಕಲಬುರಗಿ, ಬಾಗಲಕೋಟೆ, ಬೆಂಗಳೂರು ಸೇರಿ ವಿವಿಧೆಡೆ ಲವ್‌ ಜಿಹಾದ್‌ ತಡೆಗೆ ಶ್ರೀರಾಮಸೇನಿಯ ಸಹಾಯವಾಣಿಗೆ ಏಕಕಾಲದಲ್ಲಿ ಚಾಲನೆ ನೀಡಲಾಗಿದೆ.

Continue Reading

ದೇಶ

Karan Bhushan Singh: ಬಿಜೆಪಿ ಅಭ್ಯರ್ಥಿಯ ಬೆಂಗಾವಲು ವಾಹನ ಡಿಕ್ಕಿಯಾಗಿ ಇಬ್ಬರ ಸಾವು

Karan Bhushan Singh: ಉತ್ತರ ಪ್ರದೇಶದ ಗೊಂಡಾದಲ್ಲಿ ಕೈಸರ್ಗಂಜ್ ಲೋಕಸಭಾ ಕ್ಷೇತ್ರದ ಬಿಜೆಪಿ ಅಭ್ಯರ್ಥಿ, ಸಂಸದ ಮತ್ತು ಕುಸ್ತಿ ಫೆಡರೇಶನ್ (ಡಬ್ಲ್ಯುಎಫ್‌ಐ)ನ ಮಾಜಿ ಮುಖ್ಯಸ್ಥ ಬ್ರಿಜ್ ಭೂಷಣ್ ಶರಣ್ ಸಿಂಗ್ ಅವರ ಪುತ್ರ ಕರಣ್ ಭೂಷಣ್ ಸಿಂಗ್ ಅವರ ಬೆಂಗಾವಲು ಪಡೆಗೆ ಸೇರಿದ ಟೊಯೊಟಾ ಫಾರ್ಚೂನರ್ ಎಸ್‌ಯುವಿ ಬೈಕ್‌ಗೆ ಡಿಕ್ಕಿ ಹೊಡೆದ ಪರಿಣಾಮ 17 ವರ್ಷದ ಯುವಕ ಸೇರಿದಂತೆ ಇಬ್ಬರು ಮೃತಪಟ್ಟಿದ್ದಾರೆ.

VISTARANEWS.COM


on

Karan Bhushan Singh
Koo

ಲಕ್ನೋ: ಪುಣೆಯಲ್ಲಿ 17 ವರ್ಷದ ಅಪ್ರಾಪ್ತ ಬಾಲಕನೊಬ್ಬ ಕುಡಿದು ಐಷಾರಾಮಿ ಪೋರ್ಷೆ ಕಾರನ್ನು ಚಲಾಯಿಸಿ ಇಬ್ಬರ ಸಾವಿಗೆ ಕಾರಣವಾದ ಘಟನೆ ಹಸಿಯಾಗಿರುವಾಗಲೇ ಅಂತಹದ್ದೇ ಮತ್ತೊಂದು ಘಟನೆ ಉತ್ತರ ಪ್ರದೇಶದಲ್ಲಿ ಬೆಳಕಿಗೆ ಬಂದಿದೆ. ಉತ್ತರ ಪ್ರದೇಶದ ಗೊಂಡಾದಲ್ಲಿ ಕೈಸರ್ಗಂಜ್ ಲೋಕಸಭಾ ಕ್ಷೇತ್ರದ ಬಿಜೆಪಿ ಅಭ್ಯರ್ಥಿ, ಸಂಸದ ಮತ್ತು ಕುಸ್ತಿ ಫೆಡರೇಶನ್ (ಡಬ್ಲ್ಯುಎಫ್‌ಐ)ನ ಮಾಜಿ ಮುಖ್ಯಸ್ಥ ಬ್ರಿಜ್ ಭೂಷಣ್ ಶರಣ್ ಸಿಂಗ್ (Brij Bhushan Sharan Singh) ಅವರ ಪುತ್ರ ಕರಣ್ ಭೂಷಣ್ ಸಿಂಗ್ (Karan Bhushan Singh) ಅವರ ಬೆಂಗಾವಲು ಪಡೆಗೆ ಸೇರಿದ ಟೊಯೊಟಾ ಫಾರ್ಚೂನರ್ ಎಸ್‌ಯುವಿ ಬೈಕ್‌ಗೆ ಡಿಕ್ಕಿ ಹೊಡೆದ ಪರಿಣಾಮ 17 ವರ್ಷದ ಯುವಕ ಸೇರಿದಂತೆ ಇಬ್ಬರು ಮೃತಪಟ್ಟಿದ್ದಾರೆ.

ಗೊಂಡಾದ ಕರ್ನಲ್‌ಗಂಜ್-ಹುಜೂರ್‌ಪುರ ರಸ್ತೆಯ ಬೈಕುಂತ್ ಪದವಿ ಕಾಲೇಜು ಬಳಿ ಅಪಘಾತ ಸಂಭವಿಸಿದ್ದು, ಮೃತರನ್ನು 17 ವರ್ಷದ ರೆಹಾನ್ ಮತ್ತು ಆತನ ಸಂಬಂಧಿ 24 ವರ್ಷದ ಶಹಜಾದ್ ಎಂದು ಗುರುತಿಸಲಾಗಿದೆ. ಇನ್ನೋರ್ವ ವ್ಯಕ್ತಿ ಗಾಯಗೊಂಡು ಆಸ್ಪತ್ರೆಗೆ ದಾಖಲಾಗಿದ್ದಾರೆ.

ಘಟನೆಯ ವಿವರ

ಈ ಬಗ್ಗೆ ಎಫ್ಐಆರ್ ದಾಖಲಿಸಿರುವ ಚಂದಾ ಬೇಗಂ ಮಾತನಾಡಿ, ʼʼಇಂದು (ಮೇ 29) ಬೆಳಿಗ್ಗೆ 9 ಗಂಟೆ ಸುಮಾರಿಗೆ ತನ್ನ ಮಗ ರೆಹಾನ್ ಮತ್ತು ಸೋದರಳಿಯ ಶಹಜಾದ್ ಔಷಧ ಖರೀದಿಸಲು ಬೈಕ್‌ನಲ್ಲಿ ಹೋಗುತ್ತಿದ್ದಾಗ ಎದುರಿನಿಂದ ವೇಗವಾಗಿ ಬಂದ ಟೊಯೊಟಾ ಫಾರ್ಚೂನರ್ ಎಸ್‌ಯುವಿ ಡಿಕ್ಕಿ ಹೊಡೆದಿದೆ. ಇಬ್ಬರೂ ಸ್ಥಳದಲ್ಲೇ ಸಾವನ್ನಪ್ಪಿದ್ದು, ಇನ್ನೋರ್ವ ವ್ಯಕ್ತಿ ಗಾಯಗೊಂಡು ಆಸ್ಪತ್ರೆಗೆ ದಾಖಲಾಗಿದ್ದಾರೆʼʼ ಎಂದು ಹೇಳಿದ್ದಾರೆ.

ಕೂಡಲೇ ಸ್ಥಳಕ್ಕೆ ಆಗಮಿಸಿದ ಸ್ಥಳೀಯರು ಮತ್ತು ಮೃತರ ಕುಟುಂಬದವರು ನ್ಯಾಯಕ್ಕಾಗಿ ಪ್ರತಿಭಟನೆ ನಡೆಸಿದರು. ಕ್ರಮ ಕೈಗೊಂಡ ಪೊಲೀಸರು ಅಪಘಾತ ನಡೆದ ನಂತರ ಪರಾರಿಯಾಗಿದ್ದ ಟೊಯೊಟಾ ಫಾರ್ಚೂನರ್‌ನ ಚಾಲಕನ್ನು ಬಂಧಿಸಿದ್ದಾರೆ. ಅಪಘಾತ ನಡೆದ ಸಮಯದಲ್ಲಿ ಕರಣ್ ಭೂಷಣ್ ಸಿಂಗ್ ಅವರು ವಾಹನದಲ್ಲಿ ಇದ್ದರಾ ಎನ್ನುವ ಬಗ್ಗೆ ಇದುವರೆಗೆ ಮಾಹಿತಿ ಲಭಿಸಿಲ್ಲ. ಸದ್ಯ ಮೃತದೇಹವನ್ನು ಮರಣೋತ್ತರ ಪರೀಕ್ಷೆಗಾಗಿ ಕಳುಹಿಸಲಾಗಿದ್ದು, ಪೊಲೀಸರು ಹೆಚ್ಚಿನ ತನಿಖೆ ಕೈಗೆತ್ತಿಕೊಂಡಿದ್ದಾರೆ.

ಕೈಸರ್‌ಗಂಜ್‌ ಲೋಕಸಭೆ ಕ್ಷೇತ್ರದಿಂದ ಕಳೆದ ಮೂರು ಚುನಾವಣೆಗಳಲ್ಲಿ ಸ್ಪರ್ಧಿಸಿದ್ದ ಬ್ರಿಜ್‌ ಭೂಷಣ್‌ ಸಿಂಗ್‌ ಅವರ ವಿರುದ್ಧ ಲೈಂಗಿಕ ಕಿರುಕುಳ ಆರೋಪ ಬಂದಿರುವ ಕಾರಣ ಈ ಬಾರಿ ಬಿಜೆಪಿ ಅವರಿಗೆ ಟಿಕೆಟ್‌ ನೀಡಿರಲಿಲ್ಲ. ಅವರ ಬದಲಾಗಿ ಪುತ್ರ ಕರಣ್ ಭೂಷಣ್ ಸಿಂಗ್ ಅವರಿಗೆ ಮಣೆ ಹಾಕಲಾಗಿತ್ತು. ಬ್ರಿಜ್​ ಭೂಷಣ್​ ಶರಣ್​ ಸಿಂಗ್​ ಈ ಹಿಂದೆ ಭಾರತೀಯ ಕುಸ್ತಿ ಫೆಡರೇಷನ್ ಅಧ್ಯಕ್ಷರಾಗಿದ್ದರು. ಲೈಂಗಿಕ ದೌರ್ಜನ್ಯವೆಸಗಿರುವ ಆರೋಪದ ಮೇಲೆ ಅವರನ್ನು ಬಂಧಿಸುವಂತೆ ಒತ್ತಾಯಿಸಿ ನೂರಾರು ಮಹಿಳಾ ಕುಸ್ತಿಪಟುಗಳು ಪ್ರತಿಭಟನೆ ನಡೆಸಿದ್ದರು. ಇದಾದ ಬಳಿಕ ಅವರನ್ನು ಕುಸ್ತಿ ಫೆಡರೇಷನ್ ಅಧ್ಯಕ್ಷ ಸ್ಥಾನದಿಂದ ಕೈಬಿಡಲಾಗಿತ್ತು.

ಇದನ್ನೂ ಓದಿ: Brij Bhushan: ಮಗನ ನಾಮನಿರ್ದೇಶನದ ವೇಳೆ 10 ಸಾವಿರಕ್ಕೂ ಅಧಿಕ ಬೆಂಬಲಿಗರೊಂದಿಗೆ ಶಕ್ತಿ ಪ್ರದರ್ಶಿಸಿದ ಬ್ರಿಜ್ ಭೂಷಣ್

ಕರಣ್ ಭೂಷಣ್ ಸಿಂಗ್ ಹಿನ್ನೆಲೆ

2019ರ ಲೋಕಸಭಾ ಚುನಾವಣೆಯಲ್ಲಿ, ಬ್ರಿಜ್ ಭೂಷಣ್ ಅವರು ಕೈಸರ್‌ಗಂಜ್‌ನಿಂದ ಚುನಾವಣೆಯಲ್ಲಿ ಎರಡು ಲಕ್ಷ ಮತಗಳಿಂದ ಗೆದ್ದಿದ್ದರು. ಕರಣ್ ಭೂಷಣ್ ಸಿಂಗ್ ಉತ್ತರ ಪ್ರದೇಶದ ಕುಸ್ತಿ ಸಂಘದ ಅಧ್ಯಕ್ಷರಾಗಿದ್ದಾರೆ. ಗೊಂಡಾದ ನವಾಬ್‌ಗಂಜ್‌ನಲ್ಲಿರುವ ಸಹಕಾರಿ ಗ್ರಾಮಾಭಿವೃದ್ಧಿ ಬ್ಯಾಂಕ್‌ನ ಅಧ್ಯಕ್ಷರಾಗಿಯೂ ಜನ ಸಂಪರ್ಕ ಹೊಂದಿದ್ದಾರೆ.

Continue Reading

ರಾಜಕೀಯ

MLC Election: ಒಂದಾದ ಸಿಎಂ- ಡಿಸಿಎಂ, ಪರಂ ಗರಂ; ಅಖಾಡಕ್ಕಿಳಿದ ರಮೇಶ್‌ ಕುಮಾರ್‌

MLC Election: ಪರಿಷತ್ ಅಭ್ಯರ್ಥಿ ಆಯ್ಕೆ ವಿಷ್ಯದಲ್ಲಿ ಹಿರಿಯ ನಾಯಕರ ಸಲಹೆ ಪಡೆದಿಲ್ಲ. ಇಂಥ ಆಯ್ಕೆಗಳನ್ನು ನಾಲ್ಕು ಗೋಡೆ ನಡುವೆ ಮಾಡುವುದು ಸರಿಯಲ್ಲ ಎಂದು ಗೃಹ ಸಚಿವ ಪರಮೇಶ್ವರ ಬಹಿರಂಗವಾಗಿ ಟೀಕಿಸಿದ್ದಾರೆ. ಕಳೆದ ವಿಧಾನಸಭಾ ಚುನಾವಣೆ ಸಂದರ್ಭದಲ್ಲಿಯೂ ಕೈ ಪಾಳಯದಲ್ಲಿ ಈ ಬಗ್ಗೆ ಅಸಮಾಧಾನ ಮೂಡಿತ್ತು.

VISTARANEWS.COM


on

mlc election
Koo

ಬೆಂಗಳೂರು: ವಿಧಾನ ಪರಿಷತ್‌ಗೆ (MLC Election) ಕಾಂಗ್ರೆಸ್ ಅಭ್ಯರ್ಥಿ ಆಯ್ಕೆ ಬಿಕ್ಕಟ್ಟಿನ ಚೆಂಡು ಸದ್ಯಕ್ಕೆ ಹೈಕಮಾಂಡ್ ಅಂಗಳದಲ್ಲಿದೆ. ದೆಹಲಿಯಲ್ಲಿ ನಡೆಯುತ್ತಿರುವ ಸರಣಿ ಸಭೆಗಳಲ್ಲಿ ಸಿಎಂ ಸಿದ್ದರಾಮಯ್ಯ (CM Siddaramaiah) ಹಾಗೂ ಡಿಸಿಎಂ ಡಿ.ಕೆ ಶಿವಕುಮಾರ್‌ (DCM DK Shivakumar) ಸದ್ಯ ತಮ್ಮ ಭಿನ್ನಮತಗಳನ್ನು ಮರೆತು ಒಂದಾಗಿದ್ದಾರೆ. ಈ ನಡುವೆ ಹಿರಿಯ ನಾಯಕ, ಗೃಹ ಸಚಿವ ಪರಮೇಶ್ವರ (G Parameshwara) ಅವರು, ಹಿರಿಯ ನಾಯಕರನ್ನು ಕಡೆಗಣಿಸಲಾಗುತ್ತಿದೆ ಎಂಬ ಬಾಂಬ್‌ ಹಾಕಿದ್ದಾರೆ. ಕೋಲಾರದ ಹಿರಿಯ ನಾಯಕ ರಮೇಶ್‌ ಕುಮಾರ್‌ (Ramesh Kumar) ಅವರು ಕೂಡ ತಮ್ಮ ದಾಳ ಉರುಳಿಸಲು ಮುಂದಾಗಿದ್ದಾರೆ.

ರಾಜಕೀಯ ವರ್ಚಸ್ಸಿಗಾಗಿ ನನಗೆ ನೀನು, ನಿನಗೆ ನಾನು ಎಂಬ ತತ್ವ ಉಪಯೋಗಿಸಿರುವ ಸಿಎಂ ಹಾಗೂ ಡಿಸಿಎಂ, ತಮ್ಮ ಆಪ್ತರಿಗೆ ಟಿಕೆಟ್‌ ಕೊಡಿಸುವುದು ಬಹುತೇಕ ಖಚಿತವಾಗಿದೆ. ಪರಿಷತ್ ಅಭ್ಯರ್ಥಿ ಆಯ್ಕೆ ವಿಚಾರದಲ್ಲಿ ಡಿಕೆಶಿ, ಸಿದ್ದರಾಮಯ್ಯ ಒಂದಾಗಿದ್ದು, ಹಿರಿಯ ನಾಯಕರ ಅಭಿಪ್ರಾಯವನ್ನು ತೆಗೆದುಕೊಳ್ಳದೇ ದೆಹಲಿಗೆ ದೌಡಾಯಿಸಿದ್ದಾರೆ. ಎರಡು ಪ್ರತ್ಯೇಕ ಪಟ್ಟಿ ಹಿಡಿದು ಹೊರಟಿರುವ ನಾಯಕರು ರಾಜ್ಯ ಉಸ್ತುವಾರಿ ರಣದೀಪ್‌ ಸುರ್ಜೇವಾಲಾ ಭೇಟಿ ಮಾಡಿದ್ದಾರೆ. ನಾಳೆ ಎಐಸಿಸಿ ಅಧ್ಯಕ್ಷ ಖರ್ಗೆಯವರನ್ನು (Mallikarjun Kharge) ಭೇಟಿ ಮಾಡಲಿದ್ದಾರೆ.

ಸಿದ್ದರಾಮಯ್ಯ ಪುತ್ರ ಯತೀಂದ್ರ ಹಾಗೂ ಗೋವಿಂದರಾಜುಗೆ ಟಿಕೆಟ್ ಕನ್ಫರ್ಮ್ ಎಂದು ಮೂಲಗಳು ತಿಳಿಸಿವೆ. ಈ ಉಭಯರ ಪರವಾಗಿ ಸಿಎಂ ಸಿದ್ದರಾಮಯ್ಯ ಬ್ಯಾಟಿಂಗ್ ಮಾಡಿದ್ದಾರೆ. ಪುತ್ರ ಯತೀಂದ್ರ ತಂದೆಗಾಗಿ ವರುಣ ಕ್ಷೇತ್ರ ತ್ಯಾಗ ಮಾಡಿದ್ದರು. ತ್ಯಾಗ ಮಾಡಿದ ಮಗನಿಗೆ ಪರಿಷತ್ ಸ್ಥಾನ ಕೊಡಿಸಲು ಸಿದ್ದರಾಮಯ್ಯ ಟೊಂಕ ಕಟ್ಟಿದ್ದಾರೆ. ಇತ್ತ ಗೋವಿಂದರಾಜು ಪರವಾಗಿಯೂ ಸಿಎಂ‌ ಬ್ಯಾಟಿಂಗ್ ಮಾಡಿದ್ದಾರೆ.

ಡಿಕೆಶಿ ಹೇಳಿರುವ ಹೆಸರಿಗೂ ಸಿಎಂ ಎಸ್ ಎಂದಿದ್ದಾರೆ ಎನ್ನುತ್ತಿವೆ ಮೂಲಗಳು. ವಿನಯ್ ಕಾರ್ತಿಕ್ ಹಾಗೂ ಮುಳುಗುಂದ್ ಪರ ಡಿಕೆಶಿ ನಿಂತಿದ್ದಾರೆ ಎನ್ನುತ್ತಿವೆ ದೆಹಲಿಯ ಮೂಲಗಳು. ಹೀಗಾಗಿ ಈ ಬಾರಿ ಪರಿಷತ್ ಅಭ್ಯರ್ಥಿ ಆಯ್ಕೆಯಲ್ಲಿ ಸಿಎಂ, ಡಿಸಿಎಂ ಇಬ್ಬರ ಕೈ ಮೇಲುಗೈ ಆಗೋದರಲ್ಲಿ ಯಾವುದೇ ಅನುಮಾನವಿಲ್ಲ.

ಇದರಿಂದ ಕಾಂಗ್ರೆಸ್ ಪಕ್ಷದ ಹಿರಿಯ ಹುದ್ದರಿಗಳಲ್ಲಿ ಅಸಮಾಧಾನ ಮೂಡಿದೆ. ದೆಹಲಿಯಲ್ಲಿ ಚರ್ಚೆಗೂ ಮುನ್ನವೇ ಕೈ ಪಾಳಯದಲ್ಲಿನ ಹಿರಿಯ ನಾಯಕರ ಅಸಮಾಧಾನ ಮುಗಿಲು ಮುಟ್ಟಿದ್ದು, ಪ್ರತಿ ಬಾರಿಯೂ ಹಿರಿಯ ನಾಯಕರ ಕಡೆಗಣಿನೆಯಾಗುತ್ತಿದೆ ಎಂದು ಕೆಲವರು ಬಹಿರಂಗ ಅಸಮಾಧಾನ ತೋಡಿಕೊಂಡಿದ್ದಾರೆ. ಪರಿಷತ್ ಅಭ್ಯರ್ಥಿ ಆಯ್ಕೆ ವಿಷ್ಯದಲ್ಲಿ ಹಿರಿಯ ನಾಯಕರ ಸಲಹೆ ಪಡೆದಿಲ್ಲ. ಇಂಥ ಆಯ್ಕೆಗಳನ್ನು ನಾಲ್ಕು ಗೋಡೆ ನಡುವೆ ಮಾಡುವುದು ಸರಿಯಲ್ಲ ಎಂದು ಗೃಹ ಸಚಿವ ಪರಮೇಶ್ವರ ಬಹಿರಂಗವಾಗಿ ಟೀಕಿಸಿದ್ದಾರೆ.

ಕಳೆದ ವಿಧಾನಸಭಾ ಚುನಾವಣೆ ಸಂದರ್ಭದಲ್ಲಿಯೂ ಕೈ ಪಾಳಯದಲ್ಲಿ ಈ ಬಗ್ಗೆ ಅಸಮಾಧಾನ ಮೂಡಿತ್ತು. ಈ ಬಾರಿಯೂ ಸಿಎಂ, ಡಿಸಿಎಂ ತಮ್ಮ ತಮ್ಮ ಆಪ್ತರಿಗೆ ಟಿಕೆಟ್ ಕೊಡಿಸುವುದು ಪಕ್ಕಾ ಆಗಿದ್ದು, ಇವರಿಬ್ಬರ ನಿರಂಕುಶ ಓಟಕ್ಕೆ ಎಐಸಿಸಿ ಅಧ್ಯಕ್ಷ ಖರ್ಗೆ ಬ್ರೇಕ್ ಹಾಕುತ್ತಾರಾ ನೋಡಬೇಕಿದೆ.

ಇತ್ತ ಕೊನೆಯ ಕ್ಷಣದಲ್ಲಿ ಪರಿಷತ್ ಸ್ಪರ್ಧೆಗೆ ರಮೇಶ್ ಕುಮಾರ್ ಎಂಟ್ರಿ ಕೊಟ್ಟಿದ್ದಾರೆ. ಕಾಂಗ್ರೆಸ್‌ಗೆ ಸಿಗುವ ಏಳು ಸ್ಥಾನಕ್ಕೆ ಭಾರಿ ಪೈಪೋಟಿ ಇದ್ದು, ಏಳು ಸ್ಥಾನಕ್ಕೆ ಅಭ್ಯರ್ಥಿ ಆಯ್ಕೆ ಮಾಡಲು ದೆಹಲಿಗೆ ಹೋಗುವ ಮುನ್ನವೇ ರಮೇಶ್ ಕುಮಾರ್ ಅವರು ಸಿಎಂ ಭೇಟಿ ಮಾಡಿ ಚರ್ಚೆ ಮಾಡಿದ್ದಾರೆ. ಕೋಲಾರ ಹಾಗೂ ಚಿಕ್ಕಬಳ್ಳಾಪುರ ಜಿಲ್ಲೆಯ ಕಾಂಗ್ರೆಸ್ ಶಾಸಕರ ಜತೆ ಹೋಗಿ ಲಾಬಿ ಮಾಡಿರುವ ರಮೇಶ್‌ ಕುಮಾರ್‌, ಪರಿಷತ್ ಸ್ಥಾನ ತಮಗೆ ಕೊಡಿಸುವಂತೆ ಪಟ್ಟು ಹಿಡಿದಿದ್ದಾರೆ.

ನನ್ನ ಲಿಸ್ಟ್‌ನಲ್ಲಿ ನೀನು ಇದ್ದೀಯಾ. ಡಿಕೆ ಶಿವಕುಮಾರ್ ಬಳಿ ಹೋಗು. ಅವರ ಪಟ್ಟಿಯಲ್ಲಿ ಹೆಸರು ಬರುವ ರೀತಿ ಮಾಡು ಎಂದು ಸಿದ್ದರಾಮಯ್ಯ ಓಲೈಸಿ ಕಳಿಸಿದ್ದಾರೆ. ಹೀಗಾಗಿ ಡಿಕೆಶಿ ಮನೆಗೂ ತೆರಳಿದ ರಮೇಶ್ ಕುಮಾರ್ ಆಂಡ್ ಟೀಮ್, ಪರಿಷತ್ ಸ್ಥಾನ ಕೊಡಿಸುವಂತೆ ಪಟ್ಟು ಹಿಡಿದಿದ್ದಾರೆ. ಆಕಾಂಕ್ಷಿಗಳ ಸಂಖ್ಯೆ ದುಪ್ಪಟ್ಟು ಇದೆ. ಆದರೂ ನಿಮ್ಮ ಬಗ್ಗೆ ಹೈಕಮಾಂಡ್ ಜತೆ ಮಾತನಾಡ್ತೀವಿ ಎಂದು ಹೇಳಿ ಡಿಕೆಶಿ ಕಳಿಸಿದ್ದಾರೆ ಎಂದು ತಿಳಿದುಬಂದಿದೆ.

ಹೀಗಾಗಿ ದೆಹಲಿಯ ಕಾಂಗ್ರೆಸ್ ಬೆಳವಣಿಗೆಗಳ ಮೇಲೆ ರಮೇಶ್ ಕುಮಾರ್ ಕಣ್ಣಿಟ್ಟಿದ್ದಾರೆ. ಅತ್ತ ಕೆ.ಎಚ್‌ ಮುನಿಯಪ್ಪ ಬಣ ರಮೇಶ್‌ ಕುಮಾರರ ಆಕಾಂಕ್ಷೆಗೆ ಅಡ್ಡಗಾಲಾಗಿದೆ. ಈ ವಿರೋಧದ ನಡುವೆಯೂ ರಮೇಶ್ ಕುಮಾರ್‌ಗೆ ಸ್ಥಾನ ಒಲಿಯಲಿದೆಯೇ ನೋಡಬೇಕಿದೆ.

ಇದನ್ನೂ ಓದಿ: MLC Election: ಪರಿಷತ್ ಚುನಾವಣೆಯಲ್ಲಿ ಕಾಂಗ್ರೆಸ್‌ ಅಭ್ಯರ್ಥಿಗಳ ಗೆಲುವು ಖಚಿತ: ಬೇಳೂರು

Continue Reading
Advertisement
PM Narendra Modi
ದೇಶ10 mins ago

PM Narendra Modi: ಒಡಿಶಾ ಸಿಎಂ ಆರೋಗ್ಯ ಹದಗೆಟ್ಟಿರುವ ಹಿಂದೆ ಇದ್ಯಾ ಭಾರೀ ಸಂಚು? ಏನಂದ್ರು ಪ್ರಧಾನಿ ಮೋದಿ?-ವಿಡಿಯೋ ಇದೆ

Arvind Kejriwal
ದೇಶ11 mins ago

Arvind Kejriwal: ಕಾಂಗ್ರೆಸ್‌ ಜತೆ ನಮ್ಮ ‘ಮದುವೆ’ ಶಾಶ್ವತ ಅಲ್ಲ ಎಂದ ಕೇಜ್ರಿವಾಲ್;‌ ‘ಡಿವೋರ್ಸ್‌’ ಯಾವಾಗ?

Love Jihad
ಪ್ರಮುಖ ಸುದ್ದಿ15 mins ago

Love Jihad: ಲವ್ ಜಿಹಾದ್ ತಡೆಗೆ ಹೆಲ್ಪ್‌ಲೈನ್‌ ಆರಂಭಿಸಿದ ಶ್ರೀರಾಮಸೇನೆ

Karan Bhushan Singh
ದೇಶ26 mins ago

Karan Bhushan Singh: ಬಿಜೆಪಿ ಅಭ್ಯರ್ಥಿಯ ಬೆಂಗಾವಲು ವಾಹನ ಡಿಕ್ಕಿಯಾಗಿ ಇಬ್ಬರ ಸಾವು

mlc election
ರಾಜಕೀಯ29 mins ago

MLC Election: ಒಂದಾದ ಸಿಎಂ- ಡಿಸಿಎಂ, ಪರಂ ಗರಂ; ಅಖಾಡಕ್ಕಿಳಿದ ರಮೇಶ್‌ ಕುಮಾರ್‌

Viral Run Out Video
ಕ್ರೀಡೆ35 mins ago

Viral Run Out Video: 11 ಆಟಗಾರರಿಂದ ರನೌಟ್​ ಪ್ರಯತ್ನ; ಕೊನೆಗೂ ನಾಟೌಟ್​ ಆದ ಬ್ಯಾಟರ್​

Ambareesh Birthday during Sumalatha Ambareesh Talks About Abhishek Ambareesh And Aviva
ಸ್ಯಾಂಡಲ್ ವುಡ್42 mins ago

Ambareesh Birthday: ಸಿಹಿ ಸುದ್ದಿ ಕೊಡಲಿದ್ದಾರಾ ಅಭಿಷೇಕ್‌-ಅವಿವಾ? ಸುಮಲತಾ ಹೇಳಿದ್ದೇನು?

All Eyes on Rafah
ರಾಜಕೀಯ46 mins ago

All Eyes on Rafah: 30 ಮಿಲಿಯನ್ ಜನರನ್ನು ತಲುಪಿದ ‘ಆಲ್ ಐಸ್ ಆನ್ ರಫಾ’ ಪೋಸ್ಟ್‌!

Bomb Threat
ಪ್ರಮುಖ ಸುದ್ದಿ48 mins ago

Bomb Threat: ಕೆಂಪೇಗೌಡ ಏರ್‌ಪೋರ್ಟ್‌ಗೆ ಬಾಂಬ್ ಬೆದರಿಕೆ ಸಂದೇಶ; ಆತಂಕ ಸೃಷ್ಟಿ

Hardik Pandya
ಕ್ರೀಡೆ1 hour ago

Hardik Pandya: ಕೌಟುಂಬಿಕ ಸಮಸ್ಯೆ ಬದಿಗೊತ್ತಿ ಭಾರತ ತಂಡದ ಯಶಸ್ಸಿಗಾಗಿ ಕ್ರಿಕೆಟ್​ ಅಭ್ಯಾಸ ಆರಂಭಿಸಿದ ಹಾರ್ದಿಕ್​ ಪಾಂಡ್ಯ

Sharmitha Gowda in bikini
ಕಿರುತೆರೆ8 months ago

Geetha Serial Kannada: ನಿದ್ದೆ ಕದ್ದ ಚೋರಿ! ನಟಿ `ಭಾನುಮತಿ’ ಹಾಟ್‌ ಪೋಟೊಗಳಿಗೆ ಫ್ಯಾನ್ಸ್ ಫುಲ್ ಫಿದಾ

Kannada Serials
ಕಿರುತೆರೆ8 months ago

Kannada Serials TRP: 2ನೇ ಸ್ಥಾನದಲ್ಲಿ 2 ಧಾರಾವಾಹಿಗಳು; ಟಿಆರ್‌ಪಿ ರೇಸ್‌ನಲ್ಲಿಲ್ಲ ಭಾಗ್ಯಲಕ್ಷ್ಮೀ!

Bigg Boss- Saregamapa 20 average TRP
ಕಿರುತೆರೆ7 months ago

Kannada Serials TRP: ಏಳನೇ ಸ್ಥಾನಕ್ಕೆ ʻಅಮೃತಧಾರೆʼ ಕುಸಿತ; ಬಿಗ್‌ ಬಾಸ್‌-ಸರಿಗಮಪ ಟಿಆರ್‌ಪಿ ಎಷ್ಟು?

galipata neetu
ಕಿರುತೆರೆ6 months ago

Kanyadana Serial: ಕಿರುತೆರೆಗೆ ಮತ್ತೆ ಎಂಟ್ರಿ ಕೊಟ್ಟ ʻಗಾಳಿಪಟʼ ಖ್ಯಾತಿಯ ʻನೀತುʼ!

Kannada Serials
ಕಿರುತೆರೆ8 months ago

Kannada Serials TRP: ನಾಲ್ಕನೇ ಸ್ಥಾನಕ್ಕೆ ಕುಸಿತ ಕಂಡ ʻಸೀತಾ ರಾಮʼ; ಟಿಆರ್‌ಪಿ ರೇಸ್‌ಗೆ ʻಭಾಗ್ಯಲಕ್ಷ್ಮಿʼ ಬ್ಯಾಕ್‌!

Kannada Serials
ಕಿರುತೆರೆ8 months ago

Kannada Serials TRP: ಟಿಆರ್‌ಪಿಯಲ್ಲಿ ʻಭಾಗ್ಯಲಕ್ಷ್ಮೀʼ ಹವಾ; ʻಪುಟ್ಟಕ್ಕನ ಮಕ್ಕಳುʼ ಧಾರಾವಾಹಿಗೆ ಸಂಕಷ್ಟ!

Bigg Boss' dominates TRP; Sita Rama fell to the sixth position
ಕಿರುತೆರೆ7 months ago

Kannada Serials TRP: ಟಿಆರ್‌ಪಿಯಲ್ಲಿ ʻಬಿಗ್ ಬಾಸ್ʼದೇ ಮೇಲುಗೈ; 6ನೇ ಸ್ಥಾನಕ್ಕೆ ಕುಸಿದ ʻಸೀತಾ ರಾಮʼ

geetha serial Dhanush gowda engagement
ಕಿರುತೆರೆ6 months ago

Dhanush Gowda: ಗೀತಾ ಧಾರಾವಾಹಿ ನಟನ ನಿಶ್ಚಿತಾರ್ಥ; ಭವ್ಯಾಳ ಕಮೆಂಟ್‌ ಬಾಕ್ಸ್‌ ಆಫ್‌!

varun
ಕಿರುತೆರೆ6 months ago

Brindavana Serial: ʼಬೃಂದಾವನʼ ಧಾರಾವಾಹಿಯಲ್ಲಿ ದೊಡ್ಡ ಟ್ವಿಸ್ಟ್‌; ಪ್ರಮುಖ ಪಾತ್ರಧಾರಿಯೇ ಬದಲು

Kannada Serials
ಕಿರುತೆರೆ9 months ago

Kannada Serials TRP: ಟಿಆರ್‌ಪಿಯಲ್ಲಿ ಏರಿಕೆ ಕಂಡ ʻಅಮೃತಧಾರೆʼ; ʻಗಟ್ಟಿಮೇಳʼಕ್ಕೆ ನಾಲ್ಕನೇ ಸ್ಥಾನ!

Karnataka weather Forecast
ಮಳೆ20 hours ago

Karnataka Weather : ಚಿಕ್ಕಮಗಳೂರಲ್ಲಿ ಭಾರಿ ಮಳೆ; ಯಾದಗಿರಿಯಲ್ಲಿ ಕರೆಂಟ್‌ ಕಟ್‌, ಜನರೇಟರ್‌ನಿಂದ ಮೊಬೈಲ್‌ಗಳಿಗೆ ಚಾರ್ಜಿಂಗ್‌!

tumkur murder
ತುಮಕೂರು1 day ago

Tumkur Murder : ಮಗುವಿನ ಮುಂದೆಯೇ ಹೆಂಡತಿಯ ಕತ್ತು, ದೇಹವನ್ನು ಕತ್ತರಿಸಿ ಬಿಸಾಡಿದ ದುಷ್ಟ

Karnataka Weather Forecast
ಮಳೆ2 days ago

Karnataka Weather : ಕಡಲತೀರದಲ್ಲಿ ಅಲೆಗಳ ಅಬ್ಬರ, ಪ್ರವಾಸಿಗರಿಗೆ ಕಟ್ಟೆಚ್ಚರ; ನಾಳೆಯೂ ಗಾಳಿ ಸಹಿತ ಮಳೆ ಅಬ್ಬರ

Karnataka Rain
ಮಳೆ3 days ago

Karnataka Rain : ಯಾದಗಿರಿಯಲ್ಲಿ ಬಿರುಗಾಳಿ ಸಹಿತ ಮಳೆ; ಸಿಡಿಲು ಬಡಿದು ಎಮ್ಮೆಗಳು ಸಾವು

Basavanagudi News
ಬೆಂಗಳೂರು3 days ago

Basavanagudi News : ಪೂಜಾ ಸಾಮಗ್ರಿಗೆ ಒನ್‌ ಟು ಡಬಲ್‌ ರೇಟ್‌; ದೊಡ್ಡ ಗಣಪತಿ ದೇಗುಲದಲ್ಲಿ ಕೈ ಕೈ ಮಿಲಾಯಿಸಿದ ಭಕ್ತರು-ವ್ಯಾಪಾರಿಗಳು

Karnataka Rain
ಮಳೆ4 days ago

Karnataka Rain : ಭಾರಿ ಮಳೆಗೆ ರಸ್ತೆ ಕಾಣದೆ ರಾಜಕಾಲುವೆಗೆ ಉರುಳಿದ ಆಟೋ; ಚಾಲಕ ಸ್ಥಳದಲ್ಲೇ ಸಾವು

dina bhavishya read your daily horoscope predictions for May 23 2024
ಭವಿಷ್ಯ6 days ago

Dina Bhavishya : 12 ರಾಶಿಯವರ ಇಂದಿನ ಭವಿಷ್ಯ ಹೇಗಿದೆ? ಯಾರಿಗೆ ಶುಭ, ಯಾರಿಗೆ ಅಶುಭ ಫಲ?

Karnataka Weather Forecast
ಮಳೆ1 week ago

Karnataka Weather : ಮುಂದುವರಿಯಲಿದೆ ವರುಣಾರ್ಭಟ; ಬೆಂಗಳೂರಲ್ಲೂ ಭಾರಿ ಮಳೆ ನಿರೀಕ್ಷೆ!

Karnataka Rain
ಮಳೆ1 week ago

Karnataka Rain : ಭಾರಿ ಮಳೆಗೆ ಕರೆಂಟ್‌ ಕಟ್‌, ಕತ್ತಲಲ್ಲೇ ರೋಗಿಗಳಿಗೆ ಟ್ರೀಟ್‌ಮೆಂಟ್‌; ಮರ ಬಿದ್ದರೂ ಪಾರಾದ ತಾಯಿ-ಮಗ

Love Case Father throws hot water on man who loved his daughter for coming home
ಕೊಡಗು1 week ago

Love Case : ಮನೆಗೆ ಬಂದ ಪ್ರೇಮಿಗೆ ಕೊತ ಕೊತ ಕುದಿಯುವ ನೀರು ಎರಚಿದ ಯುವತಿ ತಂದೆ!

ಟ್ರೆಂಡಿಂಗ್‌