Karnataka Weather: ಬೀದರ್‌ಗೆ ಮಳೆ ಅಲರ್ಟ್‌; ಕಾದ ಕೆಂಡವಾದ ಉತ್ತರ ಕರ್ನಾಟಕ - Vistara News

ಮಳೆ

Karnataka Weather: ಬೀದರ್‌ಗೆ ಮಳೆ ಅಲರ್ಟ್‌; ಕಾದ ಕೆಂಡವಾದ ಉತ್ತರ ಕರ್ನಾಟಕ

Rain News : ಬಿಸಿಲಿನ ಜತೆ ಜತೆಗೆ ಮಳೆ ಮುನ್ಸೂಚನೆಯನ್ನು ಹವಾಮಾನ ಇಲಾಖೆ (Karnataka Weather Forecast) ನೀಡಿದೆ.

VISTARANEWS.COM


on

women enjoying in rain and dancing
ಸಾಂದರ್ಭಿಕ ಚಿತ್ರ
ಮಹತ್ವದ, ಕುತೂಹಲಕರ ಸುದ್ದಿಗಾಗಿ ಫಾಲೊ ಮಾಡಿ
Koo

ಬೆಂಗಳೂರು: ಉತ್ತರ ಕರ್ನಾಟಕವು (Dry Weather) ಈಗ ಕಾದ ಕೆಂಡವಾಗಿದೆ. ಹಗಲು ಬಿಸಿಲಿನ ಕಾಟವಾದರೆ, ರಾತ್ರಿ ಬಿಸಿ ಗಾಳಿಗೆ ಜನರು ಬೆವರುವಂತಾಗಿದೆ. ಈ ವಾತಾವರಣಕ್ಕೆ ಹಗಲಿರುಳು ಪರಿತಪ್ಪಿಸುವಂತಾಗಿದೆ. ಹಿಂಡಿ ಹಿಪ್ಪೆ ಮಾಡುತ್ತಿರುವ ಬಿಸಿಲು ಒಂದೆಡೆಯಾದರೆ ಕೆಲವೆಡೆ ಮಳೆಯು (Rain News) ತಂಪೆರೆಯಲಿದೆ. ಮುಂದಿನ 24 ಗಂಟೆಯಲ್ಲಿ ಶುಷ್ಕ ವಾತಾವರಣ ಇರಲಿದ್ದು, ಮಳೆ ಮುನ್ಸೂಚನೆಯನ್ನು ನೀಡಲಾಗಿದೆ. ಉತ್ತರ ಒಳನಾಡಿನ ಬೀದರ್ ಜಿಲ್ಲೆಯಲ್ಲಿ ಅತೀ ಕಡಿಮೆ ಮಳೆಯಾಗಲಿದೆ. ಉಳಿದ ಭಾಗಗಳಲ್ಲಿ ಬಿಸಿಲಿನ ತಾಪ ಹೆಚ್ಚಾಗಲಿದೆ ಎಂದು ಹವಾಮಾನ ಇಲಾಖೆ (Karnataka Weather Forecast) ಮುನ್ಸೂಚನೆಯನ್ನು ನೀಡಿದೆ.

ಬೆಂಗಳೂರಲ್ಲಿ 35ರ ಗಡಿದಾಟಿದ ತಾಪಮಾನ

ಬೆಂಗಳೂರು ಮತ್ತು ಸುತ್ತಮುತ್ತಲಿನ ಪ್ರದೇಶಗಳಲ್ಲಿ ಭಾನುವಾರ ಭಾಗಶಃ ಮೋಡ ಕವಿದ ವಾತಾವರಣವಿರುತ್ತದೆ. ಬೆಂಗಳೂರಲ್ಲಿ ಕಳೆದ ಒಂದು ವಾರದಿಂದಲೂ ಗರಿಷ್ಟ ತಾಪಮಾನವು 35ರ ಗಡಿ ದಾಟಿದೆ. ಇಂದು ಗರಿಷ್ಠ ಉಷ್ಣಾಂಶ 35 ಮತ್ತು ಕನಿಷ್ಠ ಉಷ್ಣಾಂಶ 23 ಡಿಗ್ರಿ ಸೆಲ್ಸಿಯಸ್ ಇರಲಿದೆ.

ಮಂಡ್ಯ-ಮೈಸೂರಿನಲ್ಲೂ ಸೂರ್ಯನ ಪ್ರಖರತೆ

ಒಳನಾಡಿನ ಕೆಲವು ಕಡೆಗಳಲ್ಲಿ ತಾಪಮಾನ ಏರಿಕೆ ಆಗಲಿದೆ. ಉತ್ತರ ಒಳನಾಡಿನ ಬಾಗಲಕೋಟೆ, ಧಾರವಾಡ, ಗದಗ, ಕಲಬುರಗಿ, ಕೊಪ್ಪಳ ಹಾಗೂ ದಕ್ಷಿಣ ಒಳನಾಡಿನ ಬೆಂಗಳೂರು, ದಾವಣಗೆರೆ, ಹಾಸನ, ಕೋಲಾರ, ಮಂಡ್ಯ ಮತ್ತು ಮೈಸೂರು ಜಿಲ್ಲೆಗಳಲ್ಲಿ ಗರಿಷ್ಠ ತಾಪಮಾನವು ಸಾಮಾನ್ಯಕ್ಕಿಂತ 2-3 ಡಿಗ್ರಿ ಸೆಲ್ಸಿಯಸ್‌ ಹೆಚ್ಚಾಗುವ ಸಾಧ್ಯತೆಯಿದೆ.

ಪ್ರಮುಖ ನಗರಗಳಲ್ಲಿನ ಇಂದಿನ ತಾಪಮಾನ ಹೀಗಿದೆ.

ನಗರದ ಹೆಸರು- ಗರಿಷ್ಠ ಉಷ್ಣಾಂಶ- ಕನಿಷ್ಠ ಉಷ್ಣಾಂಶ (ಡಿಗ್ರಿ ಸೆಲ್ಸಿಯಸ್‌)
ಬೆಂಗಳೂರು ನಗರ: 35 ಡಿ.ಸೆ – 23 ಡಿ.ಸೆ
ಮಂಗಳೂರು: 35 ಡಿ.ಸೆ – 25 ಡಿ.ಸೆ
ಚಿತ್ರದುರ್ಗ: 36 ಡಿ.ಸೆ – 23 ಡಿ.ಸೆ
ಗದಗ: 37 ಡಿ.ಸೆ – 22 ಡಿ.ಸೆ
ಹೊನ್ನಾವರ: 34 ಡಿ.ಸೆ- 22 ಡಿ.ಸೆ
ಕಲಬುರಗಿ: 40 ಡಿ.ಸೆ – 26 ಡಿ.ಸೆ
ಬೆಳಗಾವಿ: 36 ಡಿ.ಸೆ – 19 ಡಿ.ಸೆ
ಕಾರವಾರ: 35 ಡಿ.ಸೆ – 22 ಡಿ.ಸೆ

ಇದನ್ನೂ ಓದಿ: Namma Metro: ಮೆಟ್ರೋ ಮಹಿಳಾ ಸಿಬ್ಬಂದಿಗೆ ಮೈ-ಕೈ ಮುಟ್ಟಿ ಕಿರಿಕಿರಿ; ಸಹಕರಿಸದೇ ಹೋದ್ರೆ ವರ್ಗಾವಣೆ ಬೆದರಿಕೆ

ಬೇಸಿಗೆ ಫ್ಯಾಷನ್‌ಗೆ ಲಗ್ಗೆ ಇಟ್ಟ ಬಣ್ಣಬಣ್ಣದ ಬೀಡ್ಸ್ ಬ್ರೇಸ್ಲೆಟ್ಸ್


ಬಣ್ಣಬಣ್ಣದ ಬೀಡ್ಸ್ ಬ್ರೇಸ್ಲೆಟ್ಸ್ (Beads Bracelet Fashion) ಬೇಸಿಗೆಯ ಆಕ್ಸೆಸರೀಸ್ ಫ್ಯಾಷನ್‌ನಲ್ಲಿ ಲಗ್ಗೆ ಇಟ್ಟಿವೆ. ಕೈಗಳಿಗೆ ಧರಿಸಿದಾಗ ಆಕರ್ಷಕವಾಗಿ ಕಾಣುವ ಇವು ಕ್ರಿಸ್ಟಲ್, ಜೆಮ್ ರಿಪ್ಲಿಕಾ ಬೀಡ್ಸ್‌ನೊಂದಿಗೆ ಸಮಾಗಮಗೊಂಡು ನಾನಾ ಡಿಸೈನ್‌ಗಳಲ್ಲಿ ದೊರೆಯುತ್ತಿವೆ. ವಯಸ್ಸಿನ ಭೇದವಿಲ್ಲದೇ ಹುಡುಗಿಯರ, ಯುವತಿಯರ ಹಾಗೂ ಮಹಿಳೆಯರ ಕೈಗಳನ್ನು ಅಲಂಕರಿಸುತ್ತಿವೆ.

Trendy beads bracelets

ಟ್ರೆಂಡಿಯಾದ ಬೀಡ್ಸ್ ಬ್ರೇಸ್ಲೆಟ್ಸ್

“ಬೇಸಿಗೆ ಫ್ಯಾಷನ್‌ನಲ್ಲಿ ಆಕ್ಸೆಸರೀಸ್‌ಗಳು ಅತಿ ಹೆಚ್ಚು ಟ್ರೆಂಡಿಯಾಗಿವೆ. ಯಾವುದೇ ತಲೆಬಿಸಿಯಿಲ್ಲದೇ ಆರಾಮವಾಗಿ ಧರಿಸಬಹುದಾದ ಇವು ನಾನಾ ಕಲರ್‌ನಲ್ಲಿ ಕಾಲಿಟ್ಟಿವೆ. ನೋಡಲು ಆಕರ್ಷಕವಾಗಿ ಕಾಣುವ ಇವು ಒಂದೊಂದು ಬಗೆಯಲ್ಲಿ ದೊರೆಯುತ್ತಿರುವುದು ಹಾಗೂ ಉಡುಪಿನ ಮ್ಯಾಚಿಂಗ್‌ಗೆ ತಕ್ಕಂತೆ ಸಿಗುತ್ತಿರುವುದು ಟ್ರೆಂಡಿಯಾಗಲು ಕಾರಣವಾಗಿದೆ. ಯಾವುದೇ ಜಂಜಾಟವಿಲ್ಲದೇ, ಸುಲಭವಾಗಿ ಎಲಾಸ್ಟಿಕ್‌ನಲ್ಲಿ ಮಾಡಲ್ಪಟ್ಟಿರುವ ಈ ಬಣ್ಣಬಣ್ಣದ ಬೀಡ್ಸ್‌ಗಳನ್ನು ಯಾರಾದರೂ ಸುಲಭವಾಗಿ ಕೈಗಳಿಗೆ ಧರಿಸಬಹುದು. ಈ ಸೀಸನ್‌ನ ಆಕ್ಸೆಸರೀಸ್ ಫ್ಯಾಷನ್‌ನಲ್ಲಿ ಸದ್ಯಕ್ಕೆ ಟಾಪ್ ಫೈವ್ ಲಿಸ್ಟ್‌ನಲ್ಲಿವೆ” ಎನ್ನುತ್ತಾರೆ ಆಕ್ಸೆಸರೀಸ್ ಸ್ಟೈಲಿಸ್ಟ್ ರಾಗ. ಅವರ ಪ್ರಕಾರ, ಯಾವುದೇ ವಯಸ್ಸಿನವರು ಧರಿಸಬಹುದಾದ ಈ ಬೀಡ್ಸ್ ಬ್ರೇಸ್ಲೆಟ್‌ಗಳು ಎಥ್ನಿಕ್ ಉಡುಪುಗಳಿಗೆ ಮಾತ್ರವಲ್ಲ, ವೆಸ್ಟರ್ನ್ ಔಟ್‌ಫಿಟ್‌ಗಗೂ ಮ್ಯಾಚ್ ಆಗುತ್ತವೆ ಎನ್ನುತ್ತಾರೆ.

What are Beads Bracelets?

ಏನಿದು ಬೀಡ್ಸ್ ಬ್ರೇಸ್ಲೆಟ್ಸ್

ಬಣ್ಣ ಬಣ್ಣದ ಮಣಿಗಳಿಂದ ಮಾಡಲ್ಪಟ್ಟಿರುವ ಎಲಾಸ್ಟಿಕ್ ಇರುವಂತಹ ಬ್ರೇಸ್ಲೆಟ್‌ಗಳು. ಈ ಹಿಂದೆ ಇವು ಫ್ಯಾಷನ್‌ನಲ್ಲಿದ್ದಾಗ ಕೇವಲ ಕಾಲೇಜು ಹುಡುಗಿಯರು ಧರಿಸುತ್ತಿದ್ದರು. ಇಲ್ಲವೇ ಜಂಕ್ ಜ್ಯುವೆಲರಿ ಪ್ರೇಮಿಗಳು ಧರಿಸುತ್ತಿದ್ದರು. ಇದೀಗ ಇವು ನಾನಾ ಡಿಸೈನ್‌ಗಳಲ್ಲಿ ಅದರಲ್ಲೂ ಮಾನೋಕ್ರೋಮ್ ಹಾಗೂ ಮಿಕ್ಸ್ ಬೀಡ್ಸ್ ಶೇಡ್ಸ್‌ನಲ್ಲಿ ದೊರಕುತ್ತಿರುವುದು ಎಲ್ಲರೂ ಇಷ್ಟಪಡಲು ಕಾರಣವಾಗಿದೆ ಎನ್ನುತ್ತಾರೆ. ಗುಲಾಬಿ, ಲ್ಯಾವೆಂಡರ್, ತಿಳಿ ಕೆಂಪು, ಯೆಲ್ಲೋ, ಪಿಸ್ತಾ ಶೇಡ್, ಪೀಚ್, ಕೇಸರಿ, ಸಿಲ್ವರ್, ಗೋಲ್ಡ್ ಹೀಗೆ ಲೆಕ್ಕವಿಲ್ಲದಷ್ಟು ಕಲರ್‌ನಲ್ಲಿ ಇವು ದೊರಕುತ್ತಿವೆ. ಇವುಗಳ ಅಂಚಿನಲ್ಲಿ ನೇತಾಡುವ ಕಾಮಿಕ್ ಅಥವಾ ಕ್ರೌನ್‌ನಂತಹ ಮಿನಿ ಆಕ್ಸೆಸರೀಸ್‌ಗಳನ್ನು ಜೋಡಣೆ ಮಾಡಿರುವುದು ಹಾಗೂ ಮಿನುಗುವ ಕ್ರಿಸ್ಟಲ್ ಜೋಡಿಸಿರುವುದು ಈ ಬ್ರೇಸ್ಲೆಟ್‌ಗಳ ಸೌಂದರ್ಯಕ್ಕೆ ಕಾರಣವಾಗಿದೆ ಎನ್ನುತ್ತಾರೆ ಕಾಲೇಜಿನ ಹುಡುಗಿಯರಾದ ರಾಶಿ ಹಾಗೂ ರಿಚಾ.

Beads Bracelet Details

ಬೀಡ್ಸ್ ಬ್ರೇಸ್ಲೆಟ್ ಡಿಟೇಲ್ಸ್

  • • ಸಿಂಪಲ್ ಆಗಿರುವಂತಹವು 50 ರೂ.ಗಳಿಗೆ ದೊರಕುತ್ತವೆ.
  • • ಕೊಂಚ ಡಿಸೈನ್ ಇರುವಂತವು 100 ರೂ. ಗಳಿಗೆ ಲಭ್ಯ.
  • • ಮಾನೋಕ್ರೋಮ್ ಶೇಡ್‌ನವು ಔಟ್‌ಫಿಟ್‌ಗೆ ಮ್ಯಾಚ್ ಮಾಡಬಹುದು.
  • • ಬಿಂದಾಸ್ ಲುಕ್‌ಗೆ ಮೂರಕ್ಕಿಂತ ಹೆಚ್ಚನ್ನು ಒಂದೇ ಕೈಗಳಿಗೆ ಧರಿಸಬಹುದು.
  • • ನೀರಿನಲ್ಲಿ ಅದ್ದಬೇಡಿ, ಬಣ್ಣ ಮಾಸಬಹುದು.
  • • ತೆಗೆಯುವುದು ಹಾಕುವುದು ಅತಿ ಸುಲಭ.
  • • ಶೈನಿಂಗ್ ಲೈಟ್ ಶೇಡ್ಸ್‌ನವು ಅತಿ ಹೆಚ್ಚು ಟ್ರೆಂಡ್‌ನಲ್ಲಿವೆ.

ಈ ಸಂಗತಿಯ ಕುರಿತು ನಿಮ್ಮ ಅನಿಸಿಕೆ ಏನು? ಕಾಮೆಂಟ್ ಮೂಲಕ ತಿಳಿಸಿ

ಕ್ಷಣ ಕ್ಷಣದ ಮಾಹಿತಿಗಾಗಿ Vistara News FaceBook ಪೇಜ್ ಫಾಲೋ ಮಾಡಿ
ಮಹತ್ವದ ಮಾಹಿತಿಗಾಗಿ ವಿಸ್ತಾರ ನ್ಯೂಸ್ ಆ್ಯಪ್ ಉಚಿತವಾಗಿ ಡೌನ್ ಲೋಡ್ ಮಾಡಿಕೊಳ್ಳಿ: Andriod App | IOS App
Continue Reading
Click to comment

Leave a Reply

Your email address will not be published. Required fields are marked *

ಮಳೆ

Karnataka Weather : 50 ಕಿ.ಮೀ ವೇಗದಲ್ಲಿ ಬೀಸುತ್ತೆ ಗಾಳಿ; ಗುಡುಗು ಸಹಿತ ಭಾರಿ ಮಳೆಗೆ ಯೆಲ್ಲೋ ಅಲರ್ಟ್‌ ಘೋಷಣೆ

Karnataka Weather Forecast : ರಾಜ್ಯಾದ್ಯಂತ ಬಿರುಗಾಳಿ ಸಹಿತ ಗುಡುಗು ಮಿಂಚಿನ ಭಾರಿ ಮಳೆಯಾಗುವ (Heavy Rain News) ಮುನ್ಸೂಚನೆಯನ್ನು ಹವಾಮಾನ ಇಲಾಖೆ ನೀಡಿದೆ. ಹೀಗಾಗಿ ಆರು ಜಿಲ್ಲೆಗಳಿಗೆ ಯೆಲ್ಲೊ ಅಲರ್ಟ್‌ ಘೋಷಣೆ ಮಾಡಲಾಗಿದ್ದು, ಜೋರಾಗಿ ಗಾಳಿ ಬೀಸುವುದರಿಂದ ಮರದಡಿ ನಿಲ್ಲದಂತೆ ಸೂಚನೆ ನೀಡಲಾಗಿದೆ.

VISTARANEWS.COM


on

By

Karnataka Weather Forecast
ಸಾಂದರ್ಭಿಕ ಚಿತ್ರ
Koo

ಬೆಂಗಳೂರು: ದಕ್ಷಿಣ ಒಳನಾಡಿನಲ್ಲಿ ವ್ಯಾಪಕವಾಗಿ ಹಗುರದಿಂದ ಮಧ್ಯಮ ಮಳೆಯಾಗಲಿದ್ದು, ಪ್ರತ್ಯೇಕ ಕಡೆಗಳಲ್ಲಿ ಭಾರಿ ಮಳೆಯಾಗುವ ಸಾಧ್ಯತೆಯಿದೆ. ಉತ್ತರ ಒಳನಾಡು ಮತ್ತು ಮಲೆನಾಡು ಜಿಲ್ಲೆಗಳಲ್ಲಿ ಚದುರಿದಂತೆ ಹಗುರದಿಂದ ಸಾಧಾರಣ ಮಳೆಯಾಗಲಿದೆ. ಇನ್ನೂ ಕರಾವಳಿಐಲ್ಲಿ ಮಧ್ಯಮ ಮಳೆಯಾಗುವ (Rain News) ನಿರೀಕ್ಷೆ ಇದೆ. ಜತೆಗೆ ಪ್ರತ್ಯೇಕ ಸ್ಥಳಗಳಲ್ಲಿ ಗುಡುಗು ಸಹಿತ ಮಿಂಚು ಮತ್ತು ಗಾಳಿಯು ಗಂಟೆಗೆ 30-40 ಕಿ.ಮೀ ವೇಗದಲ್ಲಿ ಬೀಸುವ ಸಾಧ್ಯತೆ ಎಂದು ಹವಾಮಾನ ಇಲಾಖೆ ಮುನ್ಸೂಚನೆಯನ್ನು (Karnataka Weather Forecast) ನೀಡಿದೆ.

ದಕ್ಷಿಣ ಒಳನಾಡಿನ ಚಾಮರಾಜನಗರ, ಮಂಡ್ಯ, ರಾಮನಗರ, ತುಮಕೂರು, ಚಿಕ್ಕಬಳ್ಳಾಪುರ, ಕೋಲಾರ, ಬೆಂಗಳೂರು ಗ್ರಾಮಾಂತರ ಮತ್ತು ಬೆಂಗಳೂರು ನಗರ ಜಿಲ್ಲೆಗಳಲ್ಲಿ ಗುಡುಗು ಸಹಿತ ಭಾರಿ ಮಳೆಯಾಗುವ ಸಾಧ್ಯತೆ ಇದೆ. ಉಳಿದ ಭಾಗಗಳಲ್ಲಿ ಹಗುರದಿಂದ ಮಧ್ಯಮ ಮಳೆಯಾಗುವ ಸಾಧ್ಯತೆಯಿದೆ. ಉತ್ತರ ಒಳನಾಡಿನ ಬಳ್ಳಾರಿ ಮತ್ತು ರಾಯಚೂರು ಹಾಗೂ ಕಲಬುರಗಿ, ಯಾದಗಿರಿ, ಕೊಪ್ಪಳ, ವಿಜಯನಗರ, ಗದಗ ಮತ್ತು ಬಾಗಲಕೋಟೆ ಜಿಲ್ಲೆಗಳಲ್ಲಿ ಸಾಧಾರಣ ಮಳೆಯಾಗುವ ಸಾಧ್ಯತೆಯಿದೆ. ಉಳಿದಂತೆ ಹಗುರವಾದ ಮಳೆಯಾಗುವ ನಿರೀಕ್ಷೆ ಇದೆ.

ಮಲೆನಾಡಿನ ಹಾಸನ, ಚಿಕ್ಕಮಗಳೂರು, ಕೊಡಗು, ಶಿವಮೊಗ್ಗದಲ್ಲಿ ಚದುರಿದಂತೆ ಸಾಧಾರಣ ಮಳೆಯಾಗುವ ಸಾಧ್ಯತೆ ಇದೆ. ಕರಾವಳಿಯ ದಕ್ಷಿಣ ಕನ್ನಡ ಜಿಲ್ಲೆಯಲ್ಲಿ ಚದುರಿದಂತೆ ಸಾಧಾರಣ ಮಳೆಯಾಗುವ ಸಾಧ್ಯತೆಯಿದ್ದು, ಉಡುಪಿ ಮತ್ತು ಉತ್ತರ ಕನ್ನಡ ಜಿಲ್ಲೆಗಳಲ್ಲಿ ಹಗುರದಿಂದ ಕೂಡಿರಲಿದೆ.

ಇದನ್ನೂ ಓದಿ: Akshaya Tritiya Fashion: ಅಕ್ಷಯ ತೃತೀಯಕ್ಕೆ ಬಂತು ಬಂಗಾರದ ಆಕರ್ಷಕ ಮೂಗಿನ ಸ್ಟಡ್ಸ್

ಬೆಂಗಳೂರಲ್ಲಿ ಭಾರಿ ಮಳೆ ಮುನ್ಸೂಚನೆ

ಬೆಂಗಳೂರು ನಗರ ವ್ಯಾಪ್ತಿಯಲ್ಲಿ ಸಾಧಾರಣದಿಂದ ಭಾರಿ ಮಳೆಯಾಗುವ ಸಾಧ್ಯತೆಯಿದೆ. ಗರಿಷ್ಠ ಉಷ್ಣಾಂಶ 34 ಡಿಗ್ರಿ ಸೆಲ್ಸಿಯಸ್ ಇರಲಿದ್ದು, ಕನಿಷ್ಠ ಉಷ್ಣಾಂಶ 21 ಡಿಗ್ರಿ ಸೆಲ್ಸಿಯಸ್ ಇರಲಿದೆ.

ಯೆಲ್ಲೋ ಅಲರ್ಟ್‌

ಭಾರೀ ಮಳೆಯೊಂದಿಗೆ ಗುಡುಗು ಸಹಿತ ಬಿರುಗಾಳಿ (ಗಂಟೆಗೆ 40-50 ಕಿ.ಮೀ) ಬೀಸಲಿದೆ. ಹೀಗಾಗಿ ಐಎಂಡಿ ಹಳದಿ ಎಚ್ಚರಿಕೆಯನ್ನು ನೀಡಿದೆ. ಮುಖ್ಯವಾಗಿ ಬೆಂಗಳೂರು ಗ್ರಾಮಾಂತರ, ಬೆಂಗಳೂರು ನಗರ, ಚಾಮರಾಜನಗರ, ಕೋಲಾರ, ಮಂಡ್ಯ ಮತ್ತು ಮೈಸೂರು ಜಿಲ್ಲೆಗಳಲ್ಲಿ ಗುಡುಗು ಸಹಿತ ಭಾರಿ ಮಳೆಯಾಗುವ ಸಾಧ್ಯತೆ ಇರುವುದರಿಂದ ಯೆಲ್ಲೋ ಅಲರ್ಟ್ ಘೋಷಿಸಲಾಗಿದೆ.

ಈ ಸಂಗತಿಯ ಕುರಿತು ನಿಮ್ಮ ಅನಿಸಿಕೆ ಏನು? ಕಾಮೆಂಟ್ ಮೂಲಕ ತಿಳಿಸಿ

Continue Reading

ಮಳೆ

Karnataka Weather : ಕೊಡಗು, ಕೊಪ್ಪಳ ಸೇರಿ ಹಲವೆಡೆ ಅಬ್ಬರಿಸುತ್ತಿರುವ ಗಾಳಿ- ಮಳೆ; ನಾಳೆಗೂ ವಾರ್ನಿಂಗ್‌

Karnataka Weather Forecast : ವಿವಿಧೆಡೆ ಭಾರಿ ಗಾಳಿ-ಮಳೆಗೆ (Rain News) ಅನಾಹುತಗಳು ಸಂಭವಿಸಿದೆ. ಮಡಿಕೇರಿಯಲ್ಲಿ ಮಳೆ-ಗಾಳಿಗೆ ಕಾರಿನ ಮೇಲೆ ಮರ ಬಿದ್ದು ಜಖಂಗೊಂಡಿದೆ. ಶುಕ್ರವಾರವು ಗುಡುಗು ಸಹಿತ ಮಳೆಯಾಗುವ ಎಚ್ಚರಿಕೆಯನ್ನು ಹವಾಮಾನ ಇಲಾಖೆ ನೀಡಿದೆ. ಇತ್ತ ಮಳೆಗಾಗಿ ಮಕ್ಕಳಿಗೆ ಮದುವೆ ಮಾಡಿಸಿದ ಪ್ರಸಂಗವು ನಡೆದಿದೆ.

VISTARANEWS.COM


on

By

karnataka weather Forecast
Koo

ಕೊಡಗು/ಕೊಪ್ಪಳ/ಬೆಂಗಳೂರು: ರಾಜ್ಯದ ಹಲವೆಡೆ ಗಾಳಿ ಸಹಿತ ಮಳೆಯು (Rain News) ಅಬ್ಬರಿಸುತ್ತಿದೆ. ಗುರುವಾರದಂದು ಕೊಡಗು‌ ಜಿಲ್ಲೆಯ ವಿವಿಧೆಡೆ ಗುಡುಗು ಸಹಿತ (Karnataka Weather Forecast) ಮಳೆಯಾಗಿದೆ. ಕಳೆದೆರಡು ದಿನಗಳಿಂದ ಸಂಜೆಯಾಗುತ್ತಿದ್ದಂತೆ ಮಳೆಯ ಸಿಂಚನವಾಗುತ್ತಿದೆ. ಮುಂಜಾನೆ ಮೋಡ‌ ಕವಿದ ವಾತಾವರಣವಿದ್ದು, ಸಂಜೆ‌ ಅಬ್ಬರದೊಂದಿಗೆ ಮಳೆ ಸುರಿಯುತ್ತಿದೆ. ಮಳೆಯಿಂದ ಕೊಡಗಿನ‌ ರೈತರು ಹಾಗೂ ಸಾರ್ವಜನಿಕರ ಮೊಗದಲ್ಲಿ ಮಂದಹಾಸ ಮೂಡಿದೆ. ಮಡಿಕೇರಿ ಸಮೀಪ ನಿಲ್ಲಿಸಿದ್ದ ಕಾರಿನ ಮೇಲೆ ಭಾರಿ ಗಾಳಿ‌ಗೆ ಮರವು ಧರೆಗುರುಳಿದೆ. ಮಡಿಕೇರಿಯ ಸುದರ್ಶನ ಅಥಿತಿಗೃಹದ ಬಳಿ ಘಟನೆ ನಡೆದಿದೆ. ಅದೃಷ್ಟವಶಾತ್‌ ಕಾರಿನೊಳಗೆ ಯಾರು ಇರಲಿಲ್ಲ.

ಇತ್ತ ಕೊಪ್ಪಳ ಜಿಲ್ಲೆಯ ಕೆಲವೆಡೆ ಮಳೆಯಾಗಿದೆ. ಬಿಸಿಲನಿಂದ ಕಂಗೆಟ್ಟ ಜನರಿಗೆ ಗಾಳಿ ಸಹಿತ ಮಳೆಯು ಅಬ್ಬರಿಸಿದೆ. ಕೊಪ್ಪಳ ಜಿಲ್ಲೆ ಕಾರಟಗಿ ತಾಲೂಕಿನಲ್ಲಿ ಜೋರಾಗಿ ಮಳೆಯಾಗಿದೆ. ಬೆಂಗಳೂರಿನ ದೇವನಹಳ್ಳಿಯಲ್ಲಿರುವ ಏರ್‌ಪೋರ್ಟ್‌ನಲ್ಲೂ ಉತ್ತಮ ಮಳೆಯಾಗಿದೆ. ಬೆಳಗ್ಗೆನಿಂದ ಬಿಸಿಲಿಗೆ ಕಂಗೆಟ್ಟಿದ್ದ ಏರ್‌ಪೋರ್ಟ್‌ ಪ್ರಯಾಣಿಕರು, ಟ್ಯಾಕ್ಸಿ ಚಾಲಕರು ಮಳೆ ಆಗಮನದಿಂದ ಖುಷಿಯಾದರು. ಮಳೆಗೆ ವಾತಾವರಣವು ಕೂಲ್‌ ಆಗಿತ್ತು.

ವಿಜಯನಗರದಲ್ಲಿ ಮಳೆಗೆ ಉರುಳಿದ ಬಾಳೆ ಬೆಳೆ

ಹಂಪಿ ಪರಿಸರದಲ್ಲಿ ಸುರಿದ ಮಳೆಗೆ ಬಾಳೆ ಬೆಳೆ ಉರುಳಿದ ಘಟನೆ ವಿಜಯನಗರ ಜಿಲ್ಲೆಯ ಹೊಸಪೇಟೆ ತಾಲೂಕಿನ ವೆಂಕಟಾಪುರ ಗ್ರಾಮದಲ್ಲಿ ನಡೆದಿದೆ. ಗಾಳಿ, ಮಳೆಗೆ ಸಾವಿರಾರು ಬಾಳೆಗಿಡಗಳು ನೆಲಕ್ಕುರುಳಿವೆ. ರೈತಾಪಿ ವರ್ಗ ವರ್ಷದ ಮೊದಲ ದೊಡ್ಡ ಮಳೆ ಎಂದೇ ಕೊಂಡಾಡಿದ್ದಾರೆ. ವೆಂಕಟಾಪುರ ಮಾಗಣೆ, ನಿಂಬಾಪುರ, ಬುಕ್ಕಸಾಗರ ಮಾಗಣೆ ಗ್ರಾಮಗಳಲ್ಲಿ ಬಾಳೆ ಬೆಳೆ ನೆಲಕ್ಕೆ ಬಿದ್ದಿದೆ.

ರೈತರು ಹೆಚ್ಚಾಗಿ ಸುಗಂದಿ, ಏಲಕ್ಕಿ, ಸಕ್ಕರೆ ಬಾಳೆಯನ್ನು ಬೆಳೆದಿದ್ದರು. ವೆಂಕಟಾಪುರ ಮಾಗಣೆಯಲ್ಲಿ ಗ್ರಾಮದಲ್ಲಿ ಬಾಳೆಗಿಡಗಳಿಗೆ ಹೆಚ್ಚಿನ ಹಾನಿಯಾಗಿದೆ. ಎಕರೆಗೆ 900 ಗಿಡಗಳು ನೆಟ್ಟಿದರೆ ಕೆಲವೆಡೆ 300 ರಿಂದ 400 ಬಾಳೆ ಗಿಡ ನೆಲಸಮವಾಗಿವೆ. ಕೆಲವೆಡೆ ಎಕೆರೆಗಟ್ಟಲೇ ಗಿಡಗಳು ನೆಲಕ್ಕುರುಳಿವೆ ಎಂದು ಕೃಷಿ ಅಧಿಕಾರಿಗಳು ಮಾಹಿತಿ ನೀಡಿದ್ದಾರೆ. ಬಾಳೆ ಬೆಳೆ ಹಾನಿಗೊಳಗಾದ ರೈತರಿಗೆ ಸೂಕ್ತ ಪರಿಹಾರದ ಭರವಸೆಯನ್ನು ಜಿಲ್ಲಾಡಳಿತ ನೀಡಿದೆ. ಇನ್ನೂ ಹಲವು ತಿಂಗಳಿಂದ ತುರ್ತಾ, ಬಸವಣ್ಣ, ರಾಯ ಕಾಲುವೆಗಳಲ್ಲಿ ನೀರಿಲ್ಲದೇ ಬರಿದಾಗಿತ್ತು. ಇದೀಗ ಮಳೆಗೆ ಕಾಲುವೆಗಳಲ್ಲೂ ನೀರು ಹರಿದಿದ್ದು, ರೈತರಲ್ಲೂ ಕೊಂಚ ಸಂತಸಗೊಂಡಿದ್ದಾರೆ.

ತುಮಕೂರಲ್ಲಿ ಮಳೆಗಾಗಿ ಮಕ್ಕಳಿಗೆ ಮದುವೆ

ಕೆಲವೆಡೆ ಮಳೆಯು ಅಬ್ಬರಿಸುತ್ತಿದ್ದರೆ ಇತ್ತ ಮಳೆಗಾಗಿ ವಿಶೇಷ ಪೂಜೆ-ಪುನಸ್ಕಾರಗಳು ನಡೆಯುತ್ತಿವೆ. ಮಳೆಗಾಗಿ ತುಮಕೂರಿನಲ್ಲಿ ವಿಶೇಷ ಪ್ರಾರ್ಥನೆ ಸಲ್ಲಿಸಲಾಗಿದೆ. ತೀವ್ರ ಬರ ಹಿನ್ನೆಲೆಯಲ್ಲಿ ಬೆಳದಿಂಗಳು ಹಬ್ಬ ಆಚರಣೆ ಮಾಡಿ ಮಳೆಗಾಗಿ ಪ್ರಾರ್ಥಿಸಿದ್ದಾರೆ. ಚಿಕ್ಕ ಮಕ್ಕಳಿಗೆ ವಧು-ವರರಂತೆ ಸಿಂಗಾರಿಸಿ, ಅಲಂಕಾರಿಸಿ ಮದುವೆ ಮಾಡಿ ವಿಶೇಷ ಆಚರಣೆ ಮಾಡಿದ್ದಾರೆ. ತುಮಕೂರಿನ ಜಯಪುರ ಬಡಾವಣೆಯಲ್ಲಿ ಘಟನೆ ನಡೆದಿದೆ. ಮಳೆಗಾಗಿ ಜನರು ಹಲವು ಆಚರಣೆಗಳ ಮೊರೆ ಹೋಗಿದ್ದಾರೆ.

ಇದನ್ನೂ ಓದಿ: SSLC Result 2024: ಪಾಸ್ ಆಗಿದ್ದರೂ ಫೇಲ್ ಎಂದು ತಿಳಿದು ನೇಣಿಗೆ ಶರಣಾದ ಎಸ್‌ಎಸ್‌ಎಲ್‌ಸಿ ವಿದ್ಯಾರ್ಥಿನಿ

ಭಾರಿ ಮಳೆಯೊಂದಿಗೆ ರಭಸವಾಗಿ ಬೀಸಲಿದೆ ಗಾಳಿ

ಮೇ 10ರಂದು ದಕ್ಷಿಣ ಒಳನಾಡಿನ ಚಾಮರಾಜನಗರ, ಮೈಸೂರು, ಮಂಡ್ಯ, ಕೋಲಾರ, ಹಾಸನ, ಬೆಂಗಳೂರು ನಗರ ಮತ್ತು ಬೆಂಗಳೂರು ಗ್ರಾಮಾಂತರ ಗುಡುಗು ಸಹಿತ ಭಾರಿ ಮಳೆಯಾಗಲಿದೆ. ಕೆಲವು ಸ್ಥಳಗಳಲ್ಲಿ ಗಾಳಿಯು 40-50 ಕಿ.ಮೀ ವೇಗದಲ್ಲಿ ಬೀಸಲಿದೆ.

ಮಲೆನಾಡಿನ ಚಿಕ್ಕಮಗಳೂರು, ಹಾಸನ, ಕೊಡಗು ಮತ್ತು ದಕ್ಷಿಣ ಒಳನಾಡಿನಲ್ಲಿ ತುಮಕೂರು ಜಿಲ್ಲೆಗಳಲ್ಲಿ ಕೆಲವು ಸ್ಥಳಗಳಲ್ಲಿ ಗಾಳಿಯೊಂದಿಗೆ (40-50 kmph) ಸಾಧಾರಣ ಮಳೆಯಾಗುವ ಸಾಧ್ಯತೆಯಿದೆ. ಜತೆಗೆ ಬಳ್ಳಾರಿ, ಚಿಕ್ಕಬಳ್ಳಾಪುರ, ಚಿತ್ರದುರ್ಗ, ದಾವಣಗೆರೆ, ರಾಮನಗರ, ಶಿವಮೊಗ್ಗ ಮತ್ತು ವಿಜಯನಗರ ಜಿಲ್ಲೆಗಳಲ್ಲಿ ಗುಡುಗು ಸಹಿತ ಹಗುರದಿಂದ ಸಾಧಾರಣ ಮಳೆಯಾಗುವ ಸಾಧ್ಯತೆಯಿದೆ.

ಬೀದರ್, ಕಲಬುರಗಿ, ಯಾದಗಿರಿ, ಕೊಪ್ಪಳ ಜಿಲ್ಲೆಗಳಲ್ಲಿ ಕೆಲವೆಡೆ ಬಿರುಸಿನ ಗಾಳಿಯೊಂದಿಗೆ ಗುಡುಗು ಸಹಿತ ಮಧ್ಯಮ ಮಳೆಯಾಗಲಿದೆ. ರಾಯಚೂರು, ಕೊಪ್ಪಳ, ಬಾಗಲಕೋಟೆ, ವಿಜಯಪುರದಲ್ಲೂ ಉತ್ತಮ ಮಳೆಯಾಗುವ ನಿರೀಕ್ಷೆ ಇದೆ. ದಕ್ಷಿಣ ಕನ್ನಡ ಜಿಲ್ಲೆಯ ಕೆಲವು ಸ್ಥಳಗಳಲ್ಲಿ ಹಗುರದಿಂದ ಸಾಧಾರಣ ಮಳೆಯಾಗುವ ಸಾಧ್ಯತೆಯಿದೆ. ರಾಜ್ಯಾದ್ಯಂತ ಮುಂದಿನ 24 ಗಂಟೆಯಲ್ಲಿ ಗರಿಷ್ಠ ತಾಪಮಾನವು 2-4 ಡಿ.ಸೆ ಕಡಿಮೆಯಾಗುವ ಸಾಧ್ಯತೆ ಇದೆ.

ಇನ್ನೂ ರಾಜಧಾನಿ ಬೆಂಗಳೂರಿನಲ್ಲಿ ಸಾಮಾನ್ಯವಾಗಿ ಮೋಡ ಕವಿದ ವಾತಾವರಣ ಇರಲಿದೆ. ಕೆಲವು ಪ್ರದೇಶಗಳಲ್ಲಿ ಸಂಜೆ ಅಥವಾ ರಾತ್ರಿಗೆ ಗುಡುಗು ಸಹಿತ ಮಳೆಯಾಗಲಿದೆ. ಗರಿಷ್ಠ ಹಾಗೂ ಕನಿಷ್ಠ ಉಷ್ಣಾಂಶವು ಕ್ರಮವಾಗಿ 34-22 ಡಿ.ಸೆ ಇರಲಿದೆ.

ಈ ಸಂಗತಿಯ ಕುರಿತು ನಿಮ್ಮ ಅನಿಸಿಕೆ ಏನು? ಕಾಮೆಂಟ್ ಮೂಲಕ ತಿಳಿಸಿ

Continue Reading

ಮಳೆ

Heavy Rain: ಗಂಗಾವತಿಯಲ್ಲಿ ಭಾರೀ ಬಿರುಗಾಳಿ ಮಳೆಗೆ ಬಾಳೆ, ಮಾವು, ಮನೆಗಳಿಗೆ ಹಾನಿ

Heavy Rain: ಗಂಗಾವತಿ ತಾಲೂಕಿನಲ್ಲಿ ಬುಧವಾರ ರಾತ್ರಿ ಬೀಸಿದ ಭಾರೀ ಬಿರುಗಾಳಿ ಮತ್ತು ಮಳೆಗೆ ಅಪಾರ ಪ್ರಮಾಣದ ಕೃಷಿ ಮತ್ತು ತೋಟಗಾರಿಕಾ ಬೆಳೆಗಳಿಗೆ ಹಾನಿಯಾಗಿರುವ ಘಟನೆ ಜರುಗಿದೆ. ತಾಲೂಕಿನ ಸಣಾಪುರ, ಆನೆಗೊಂದಿ, ಮಲ್ಲಾಪುರ ಸೀಮೆಯಲ್ಲಿ ಬೆಳೆಯಲಾಗಿದ್ದ ನೂರಾರು ಹೆಕ್ಟೇರ್‌ ಪ್ರದೇಶದಲ್ಲಿನ ಬಾಳೆ ಬೆಳೆಗೆ ಹಾನಿಯಾಗಿದ್ದು, ವೆಂಕಟಗಿರಿ ಹೋಬಳಿಯ ಬಸವಪಟ್ಟಣ, ವಡ್ಡರಹಟ್ಟಿ, ಬೆಣಕಲ್ ಸೇರಿದಂತೆ ನಾನಾ ಗ್ರಾಮಗಳಲ್ಲಿನ ನೂರಾರು ಹೆಕ್ಟೇರು ಪ್ರದೇಶದಲ್ಲಿನ ಮಾವು ಬೆಳೆಗೆ ಹಾನಿಯಾಗಿದೆ.

VISTARANEWS.COM


on

Bananas mangoes crops and houses damaged due to heavy rain in Gangavathi
Koo

ಗಂಗಾವತಿ: ಬುಧವಾರ ರಾತ್ರಿ ಬೀಸಿದ ಭಾರೀ ಬಿರುಗಾಳಿ ಮತ್ತು ಮಳೆಗೆ (Heavy Rain) ತಾಲೂಕಿನಲ್ಲಿ ಅಪಾರ ಪ್ರಮಾಣದ ಕೃಷಿ ಮತ್ತು ತೋಟಗಾರಿಕಾ ಬೆಳೆಗಳಿಗೆ ಹಾನಿಯಾಗಿರುವ ಘಟನೆ ಜರುಗಿದೆ. ತಾಲೂಕಿನ ಸಣಾಪುರ, ಆನೆಗೊಂದಿ, ಮಲ್ಲಾಪುರ ಸೀಮೆಯಲ್ಲಿ ಬೆಳೆಯಲಾಗಿದ್ದ ನೂರಾರು ಹೆಕ್ಟೇರ್‌ ಪ್ರದೇಶದಲ್ಲಿನ ಬಾಳೆ ಬೆಳೆಗೆ ಹಾನಿಯಾಗಿದೆ. ವೆಂಕಟಗಿರಿ ಹೋಬಳಿಯ ಬಸವಪಟ್ಟಣ, ವಡ್ಡರಹಟ್ಟಿ, ಬೆಣಕಲ್ ಸೇರಿದಂತೆ ನಾನಾ ಗ್ರಾಮಗಳಲ್ಲಿನ ನೂರಾರು ಹೆಕ್ಟೇರ್‌ ಪ್ರದೇಶದಲ್ಲಿನ ಮಾವು ಬೆಳೆಗೆ ಹಾನಿಯಾಗಿದೆ.

ಬಾಳೆ- ಮಾವು ಹಾನಿ

ತಡರಾತ್ರಿ ಬೀಸಿದ ಭಾರೀ ಪ್ರಮಾಣದ ಬಿರುಗಾಳಿಗೆ ಆನೆಗೊಂದಿ ಭಾಗದಲ್ಲಿ ಬಾಳೆ ಗಿಡಗಳಿಗೆ ಭಾರೀ ಪ್ರಮಾಣದ ಹಾನಿಯಾಗಿದೆ. ಸಣಾಪುರ, ಆನೆಗೊಂದಿ, ಮಲ್ಲಾಪುರ ಸೀಮೆಯಲ್ಲಿ ಬೆಳೆಯಲಾಗಿದ್ದ ನೂರಾರು ಹೆಕ್ಟೇರ್‌ ಪ್ರದೇಶದಲ್ಲಿನ ಬಾಳೆಗೆ ಹಾನಿ ಉಂಟಾಗಿದೆ.

ಇದನ್ನೂ ಓದಿ: Pejawar Swamiji: ದೇವಾಲಯಗಳ ಆಡಳಿತ ಸಂಪೂರ್ಣವಾಗಿ ಹಿಂದೂಗಳಿಗೆ ಒಪ್ಪಿಸಬೇಕು: ಪೇಜಾವರ ಶ್ರೀ

ವೆಂಕಟಗಿರಿ ಹೋಬಳಿಯ ಬಸವಪಟ್ಟಣ, ವಡ್ಡರಹಟ್ಟಿ, ಬೆಣಕಲ್ ಸೇರಿದಂತೆ ನಾನಾ ಗ್ರಾಮಗಳಲ್ಲಿನ ನೂರಾರು ಹೆಕ್ಟೇರು ಪ್ರದೇಶದಲ್ಲಿನ ಮಾವು ಬೆಳೆಗೆ ಹಾನಿಯಾಗಿದೆ. ಭಾರೀ ಬಿರುಗಾಳಿಗೆ ಗಿಡದಲ್ಲಿನ ಮಾವುಗಳು ಉದುರು ಬಿದ್ದಿದ್ದು ಲಕ್ಷಾಂತರ ರೂಪಾಯಿ ಮೊತ್ತದ ಹಾನಿ ಸಂಭವಿಸಿದೆ ಎಂದು ತಿಳಿದುಬಂದಿದೆ.

ಬುಧವಾರ ರಾತ್ರಿ ಬೀಸಿದ ಭಾರೀ ಬಿರುಗಾಳಿ ಸಮೇತ ಮಳೆಗೆ ಗಂಗಾವತಿ ನಗರದ ವಿವಿಧೆಡೆ ದೊಡ್ಡ ಮರಗಳ ಕೊಂಬೆಗಳು ತುಂಡಾಗಿ ರಸ್ತೆಗೆ ಬಿದ್ದ ಪರಿಣಾಮ ಕೆಲಕಾಲ ವಾಹನಗಳ ಸಂಚಾರಕ್ಕೆ ಸಮಸ್ಯೆಯಾಗಿತ್ತು.

ನಗರದ ಅಂಗಡಿ ಸಂಗಣ್ಣ ಕ್ಯಾಂಪ್, ಮಹೆಬೂಬನಗರ, ಗೌಸಿಯಾ ಕಾಲೋನಿ, ಎಚ್.ಆರ್.ಎಸ್. ಕ್ಯಾಂಪ್, ಅಣ್ಣೂರು ಗೌರಮ್ಮಕ್ಯಾಂಪ್, ಲಿಂಗರಾಜ ಕ್ಯಾಂಪ್ ಮತ್ತು ಶರಣಬಸವೇಶ್ವರ ನಗರದಲ್ಲಿ ಕೆಲ ತಗಡಿನ ಮನೆಗಳಿಗೆ ಹಾನಿಯಾಗಿದೆ ಎಂದು ತಿಳಿದುಬಂದಿದೆ.

ಇದನ್ನೂ ಓದಿ: Gold Rate Today: ಚಿನ್ನದ ಮಾರುಕಟ್ಟೆ ಇಳಿಮುಖ; 22 ಮತ್ತು 24 ಕ್ಯಾರಟ್‌ ಬಂಗಾರದ ದರಗಳಲ್ಲಿ ಇಳಿಕೆ

ಜಂಟಿ ಸಮೀಕ್ಷೆ

ಬುಧವಾರ ರಾತ್ರಿ ಬೀಸಿದ ಭಾರೀ ಬಿರುಗಾಳಿ, ಮಳೆಗೆ ಆನೆಗೊಂದಿ ಭಾಗದಲ್ಲಿ ಬಾಳೆ ನಾಶವಾಗಿರುವ ಬಗ್ಗೆ ಮಾಹಿತಿ ಲಭಿಸುತ್ತಿದ್ದಂತೆಯೇ ಕಂದಾಯ ಮತ್ತು ತೋಟಗಾರಿಕಾ ಇಲಾಖೆಯ ಜಂಟಿ ಸಮೀಕ್ಷೆ ನಡೆಸಲಾಗುತ್ತಿದೆ. ಹಾನಿಯ ವರದಿಯನ್ನು ಜಿಲ್ಲಾಧಿಕಾರಿ ಮೂಲಕ ಸರ್ಕಾರಕ್ಕೆ ಸಲ್ಲಿಸಲಾಗುವುದು ಎಂದು ತಹಸೀಲ್ದಾರ್ ಯು. ನಾಗರಾಜ್ ತಿಳಿಸಿದ್ದಾರೆ.

Continue Reading

ಕರ್ನಾಟಕ

Karnataka Weather: ಇಂದು ಕೊಡಗು, ಹಾಸನ, ಚಿಕ್ಕಮಗಳೂರು ಸೇರಿ ವಿವಿಧೆಡೆ ಗುಡುಗು ಸಹಿತ ಭಾರಿ ಮಳೆ ಸಾಧ್ಯತೆ!

Karnataka Weather: ಬೆಂಗಳೂರು, ಕೋಲಾರ, ಚಿಕ್ಕಮಗಳೂರು, ಕೊಡಗು ಸೇರಿದಂತೆ ವಿವಿಧೆಡೆ ಬುಧವಾರ ಭಾರಿ ಮಳೆ ಸುರಿದಿತ್ತು. ಅದೇ ರೀತಿ ಇಂದು(ಮೇ 9) ಕೂಡ ರಾಜ್ಯದ ವಿವಿಧೆಡೆ ಧಾರಾಕಾರ ಮಳೆ ಸುರಿಯುವ ಮುನ್ಸೂಚನೆ ಇದೆ.

VISTARANEWS.COM


on

Karnataka Weather
Koo

ಬೆಂಗಳೂರು: ರಾಜ್ಯದ ಕೊಡಗು, ಹಾಸನ ಹಾಗೂ ಚಿಕ್ಕಮಗಳೂರು ಜಿಲ್ಲೆಗಳ ಕೆಲವು ಸ್ಥಳಗಳಲ್ಲಿ ಮೇ 9ರಂದು ಬಿರುಗಾಳಿಯೊಂದಿಗೆ ಗಾಳಿಯೊಂದಿಗೆ (30-40 kmph) ಗುಡುಗು ಸಹಿತ ಭಾರಿ ಮಳೆಯಾಗುವ (Karnataka Weather) ಸಾಧ್ಯತೆಯಿದೆ. ಅದೇ ರೀತಿ ಬಳ್ಳಾರಿ, ಬೆಂಗಳೂರು ನಗರ ಬೆಂಗಳೂರು ಗ್ರಾಮಾಂತರ, ಚಿಕ್ಕಬಳ್ಳಾಪುರ, ಚಾಮರಾಜನಗರ, ಚಿತ್ರದುರ್ಗ, ಹಾಸನ, ಕೋಲಾರ, ಮಂಡ್ಯ, ಮೈಸೂರು, ರಾಮನಗರ, ಶಿವಮೊಗ್ಗದಲ್ಲಿ ಕೆಲವು ಸ್ಥಳಗಳಲ್ಲಿ ಗುಡುಗು ಸಹಿತ ಗಾಳಿಯೊಂದಿಗೆ (30-40 kmph) ಸಾಧಾರಣ ಮಳೆಯಾಗಲಿದೆ (Rain News) ಎಂದು ಭಾರತೀಯ ಹವಾಮಾನ ಇಲಾಖೆ ಮುನ್ಸೂಚನೆ ನೀಡಿದೆ.

ಇನ್ನು ತುಮಕೂರು ಮತ್ತು ವಿಜಯನಗರ ಜಿಲ್ಲೆಗಳು, ದಕ್ಷಿಣ ಕನ್ನಡ ಜಿಲ್ಲೆಯ ಕೆಲವೆಡೆ ಹಗುರದಿಂದ ಸಾಧಾರಣ ಮಳೆಯಾಗುವ ಸಾಧ್ಯತೆ ಇದೆ. ಬೀದರ್, ಕಲಬುರ್ಗಿ, ಕೊಪ್ಪಳ ಮತ್ತು ರಾಯಚೂರು ಜಿಲ್ಲೆಗಳಲ್ಲಿ ಕೆಲವು ಸ್ಥಳಗಳಲ್ಲಿ ಹಗುರವಾದ ಮಳೆ/ ಗುಡುಗು ಸಹಿತ ಗಾಳಿ (30-40 kmph) ಉಂಟಾಗುವ ಸಾಧ್ಯತೆಯಿದೆ. ಉಳಿದ ಜಿಲ್ಲೆಗಳಲ್ಲಿ ಒಣಹವೆ ಇರುವ ಸಾಧ್ಯತೆ ಇದೆ ಎಂದು ತಿಳಿಸಿದೆ.

ಮೇ 10ರಂದು ಬಳ್ಳಾರಿ, ಬೆಂಗಳೂರು ನಗರ, ಬೆಂಗಳೂರು ಗ್ರಾಮಾಂತರ, ಚಿಕ್ಕಬಳ್ಳಾಪುರ, ಚಾಮರಾಜನಗರ, ಚಿತ್ರದುರ್ಗ, ಹಾಸನ, ಕೋಲಾರ, ಮಂಡ್ಯ, ಮೈಸೂರು, ರಾಮನಗರ, ಶಿವಮೊಗ್ಗ, ಕೆಲವು ಸ್ಥಳಗಳಲ್ಲಿ ಗುಡುಗು ಸಹಿತ ಗಾಳಿಯೊಂದಿಗೆ (30-40 ಕಿಮೀ) ಹಗುರದಿಂದ ಸಾಧಾರಣ ಮಳೆಯಾಗುವ ಸಾಧ್ಯತೆಯಿದೆ. ತುಮಕೂರು, ಕೊಡಗು, ಹಾಸನ, ಚಿಕ್ಕಮಗಳೂರು, ವಿಜಯನಗರ, ಬೀದರ್, ಕಲಬುರ್ಗಿ, ವಿಜಯಪುರ, ಬೆಳಗಾವಿ, ಕೊಪ್ಪಳ ಮತ್ತು ರಾಯಚೂರು ಜಿಲ್ಲೆಗಳು. ದಕ್ಷಿಣ ಕನ್ನಡ ಜಿಲ್ಲೆಯ ಕೆಲವೆಡೆ ಹಗುರದಿಂದ ಸಾಧಾರಣ ಮಳೆಯಾಗುವ ಸಾಧ್ಯತೆ ಇದೆ. ರಾಜ್ಯದ ಉಳಿದ ಜಿಲ್ಲೆಗಳಲ್ಲಿ ಒಣಹವೆ ಇರುವ ಸಾಧ್ಯತೆ ಇದೆ ಎಂದು ತಿಳಿಸಿದೆ. ಇದೇ ರೀತಿ ಮೇ 15ರವರೆಗೆ ರಾಜ್ಯದ ಎಲ್ಲಾ ಜಿಲ್ಲೆಗಳ ಪ್ರತ್ಯೇಕ ಸ್ಥಳಗಳಲ್ಲಿ ಹಗುರದಿಂದ ಸಾಧಾರಣ ಮಳೆಯಾಗುವ ಸಾಧ್ಯತೆಯಿದೆ ಎಂದು ಹವಾಮಾನ ಇಲಾಖೆ ಮಾಹಿರಿ ನೀಡಿದೆ.

ಇದನ್ನೂ ಓದಿ | Rain News: ರಾಜ್ಯದ ವಿವಿಧೆಡೆ ಗುಡುಗು ಸಹಿತ ಭಾರಿ ಮಳೆ; ಬೆಂಗಳೂರಿನಲ್ಲಿ ಹೊಳೆಯಂತಾದ ರಸ್ತೆಗಳು!

ತಾಪಮಾನದ ಮುನ್ಸೂಚನೆ

ಮುಂದಿನ 2 ದಿನಗಳಲ್ಲಿ ಗರಿಷ್ಠ ತಾಪಮಾನದಲ್ಲಿ ಯಾವುದೇ ದೊಡ್ಡ ಬದಲಾವಣೆ ಇಲ್ಲ ನಂತರ ರಾಜ್ಯದ ಮೇಲೆ 2-3 ಡಿಗ್ರಿ ಇಳಿಕೆಯಾಗಲಿದೆ.

ಮುಂದಿನ 24 ಗಂಟೆಗಳ ಬೆಂಗಳೂರು ಮತ್ತು ಸುತ್ತಮುತ್ತಲ ಪ್ರದೇಶದಲ್ಲಿ ಭಾಗಶಃ ಮೋಡ ಕವಿದ ವಾತಾವರಣವಿರುತ್ತದೆ. ಕೆಲವು ಪ್ರದೇಶಗಳಲ್ಲಿ ಸಂಜೆ/ರಾತ್ರಿಯ ಸಮಯದಲ್ಲಿ ಮಿಂಚು/ಗಾಳಿ (30- 40kmph) ಸಹಿತ ಲಘುವಾಗಿ ಮಧ್ಯಮ ಮಳೆಗುಡುಗು ಸಹಿತ ಮಳೆಯಾಗುವ ಸಾಧ್ಯತೆಯಿದೆ. ಗರಿಷ್ಠ ಮತ್ತು ಕನಿಷ್ಠ ತಾಪಮಾನವು ಕ್ರಮವಾಗಿ 35°C ಮತ್ತು 22°C ಇರುವ ಸಾಧ್ಯತೆ ಇದೆ.

Continue Reading
Advertisement
Dog Bite in Belgavi
ಬೆಳಗಾವಿ3 mins ago

Dog Bite : ಆಟವಾಡುತ್ತಿದ್ದ ಮಕ್ಕಳ ಮೇಲೆ ಬೀದಿ ನಾಯಿಗಳು ಅಟ್ಯಾಕ್‌

Indian Sailors Released
ವಿದೇಶ17 mins ago

Indian Sailors Released: ಭಾರತಕ್ಕೆ ಭಾರೀ ರಾಜತಾಂತ್ರಿಕ ಗೆಲುವು; ಐವರು ಭಾರತೀಯ ನಾವಿಕರು ರಿಲೀಸ್‌

Sanjiv Goenka
ಪ್ರಮುಖ ಸುದ್ದಿ24 mins ago

Sanjiv Goenka: ರಾಹುಲ್‌ಗೆ ಬೈದ ಗೋಯೆಂಕಾ; ಈ ಹಿಂದೆ ಧೋನಿಯನ್ನೇ ಕ್ಯಾಪ್ಟನ್ಸಿಯಿಂದ ತೆಗೆದಿದ್ದರು!

Solar Power
ದೇಶ27 mins ago

Solar Power: ಜಾಗತಿಕವಾಗಿ ಮತ್ತೊಮ್ಮೆ ಬೆಳಗಿದ ಭಾರತ; ಸೌರ ವಿದ್ಯುತ್‌ ಉತ್ಪಾದನೆಯಲ್ಲಿ ಜಪಾನ್‌ನನ್ನೂ ಮೀರಿದ ಸಾಧನೆ

sslc result 2024 vaishnavi self harming
ಕ್ರೈಂ1 hour ago

SSLC Result 2024: ಎಸ್‌ಎಸ್‌ಎಲ್‌ಸಿ ಫೇಲ್‌, ಸರಣಿ ಸಾವಿಗೆ ಮತ್ತೊಂದು ಸೇರ್ಪಡೆ

Job News
ಉದ್ಯೋಗ1 hour ago

Job News: ಗುಡ್‌ನ್ಯೂಸ್‌; ಸ್ಟೇಟ್‌ ಬ್ಯಾಂಕ್‌ ಆಫ್‌ ಇಂಡಿಯಾದಿಂದ ಶೀಘ್ರ 12,000 ಉದ್ಯೋಗಿಗಳ ನೇಮಕ

Char Dham Yatra
ದೇಶ1 hour ago

Char Dham Yatra: ಇಂದಿನಿಂದ ಪವಿತ್ರ ಚಾರ್‌ಧಾಮ್‌ ಯಾತ್ರೆ ಆರಂಭ

hd revanna jailed 2
ಕ್ರೈಂ2 hours ago

HD Revanna Jailed: ಇನ್ನು ಮೂರು ದಿನ ಎಚ್‌ಡಿ ರೇವಣ್ಣ ಭೇಟಿ ಯಾರಿಗೂ ಇಲ್ಲ

Aravind Kejriwal
ದೇಶ2 hours ago

Arvind Kejriwal: ಕೇಜ್ರಿವಾಲ್‌ ಜಾಮೀನು ಅರ್ಜಿ ಇಂದು ವಿಚಾರಣೆ; ದಿಲ್ಲಿ ಸಿಎಂಗೆ ಜೈಲಾ…? ಬೇಲಾ?

drowned in tank jindal bellary
ಕ್ರೈಂ2 hours ago

Drowned in Tank: ಜಿಂದಾಲ್‌ ಪ್ಲಾಂಟ್‌ನಲ್ಲಿ ನೀರಿನ ಟ್ಯಾಂಕ್‌ಗೆ ಬಿದ್ದು 3 ಎಂಜಿನಿಯರ್‌ಗಳ ಸಾವು

Sharmitha Gowda in bikini
ಕಿರುತೆರೆ7 months ago

Geetha Serial Kannada: ನಿದ್ದೆ ಕದ್ದ ಚೋರಿ! ನಟಿ `ಭಾನುಮತಿ’ ಹಾಟ್‌ ಪೋಟೊಗಳಿಗೆ ಫ್ಯಾನ್ಸ್ ಫುಲ್ ಫಿದಾ

Kannada Serials
ಕಿರುತೆರೆ7 months ago

Kannada Serials TRP: 2ನೇ ಸ್ಥಾನದಲ್ಲಿ 2 ಧಾರಾವಾಹಿಗಳು; ಟಿಆರ್‌ಪಿ ರೇಸ್‌ನಲ್ಲಿಲ್ಲ ಭಾಗ್ಯಲಕ್ಷ್ಮೀ!

Bigg Boss- Saregamapa 20 average TRP
ಕಿರುತೆರೆ7 months ago

Kannada Serials TRP: ಏಳನೇ ಸ್ಥಾನಕ್ಕೆ ʻಅಮೃತಧಾರೆʼ ಕುಸಿತ; ಬಿಗ್‌ ಬಾಸ್‌-ಸರಿಗಮಪ ಟಿಆರ್‌ಪಿ ಎಷ್ಟು?

galipata neetu
ಕಿರುತೆರೆ5 months ago

Kanyadana Serial: ಕಿರುತೆರೆಗೆ ಮತ್ತೆ ಎಂಟ್ರಿ ಕೊಟ್ಟ ʻಗಾಳಿಪಟʼ ಖ್ಯಾತಿಯ ʻನೀತುʼ!

Kannada Serials
ಕಿರುತೆರೆ7 months ago

Kannada Serials TRP: ನಾಲ್ಕನೇ ಸ್ಥಾನಕ್ಕೆ ಕುಸಿತ ಕಂಡ ʻಸೀತಾ ರಾಮʼ; ಟಿಆರ್‌ಪಿ ರೇಸ್‌ಗೆ ʻಭಾಗ್ಯಲಕ್ಷ್ಮಿʼ ಬ್ಯಾಕ್‌!

Kannada Serials
ಕಿರುತೆರೆ7 months ago

Kannada Serials TRP: ಟಿಆರ್‌ಪಿಯಲ್ಲಿ ʻಭಾಗ್ಯಲಕ್ಷ್ಮೀʼ ಹವಾ; ʻಪುಟ್ಟಕ್ಕನ ಮಕ್ಕಳುʼ ಧಾರಾವಾಹಿಗೆ ಸಂಕಷ್ಟ!

Bigg Boss' dominates TRP; Sita Rama fell to the sixth position
ಕಿರುತೆರೆ7 months ago

Kannada Serials TRP: ಟಿಆರ್‌ಪಿಯಲ್ಲಿ ʻಬಿಗ್ ಬಾಸ್ʼದೇ ಮೇಲುಗೈ; 6ನೇ ಸ್ಥಾನಕ್ಕೆ ಕುಸಿದ ʻಸೀತಾ ರಾಮʼ

geetha serial Dhanush gowda engagement
ಕಿರುತೆರೆ5 months ago

Dhanush Gowda: ಗೀತಾ ಧಾರಾವಾಹಿ ನಟನ ನಿಶ್ಚಿತಾರ್ಥ; ಭವ್ಯಾಳ ಕಮೆಂಟ್‌ ಬಾಕ್ಸ್‌ ಆಫ್‌!

varun
ಕಿರುತೆರೆ6 months ago

Brindavana Serial: ʼಬೃಂದಾವನʼ ಧಾರಾವಾಹಿಯಲ್ಲಿ ದೊಡ್ಡ ಟ್ವಿಸ್ಟ್‌; ಪ್ರಮುಖ ಪಾತ್ರಧಾರಿಯೇ ಬದಲು

Kannada Serials
ಕಿರುತೆರೆ8 months ago

Kannada Serials TRP: ಟಿಆರ್‌ಪಿಯಲ್ಲಿ ಏರಿಕೆ ಕಂಡ ʻಅಮೃತಧಾರೆʼ; ʻಗಟ್ಟಿಮೇಳʼಕ್ಕೆ ನಾಲ್ಕನೇ ಸ್ಥಾನ!

Dina Bhavishya
ಭವಿಷ್ಯ6 hours ago

Dina Bhavishya: ಶುಭ ಶುಕ್ರವಾರ ಈ ರಾಶಿಯವರಿಗೆ ಖುಲಾಯಿಸಲಿದೆ ಲಕ್‌

Prajwal Revanna case Revanna bail plea to be heard on Monday Advocate Nagesh argument was as follows
ಕ್ರೈಂ13 hours ago

Prajwal Revanna Case: ರೇವಣ್ಣ ಜಾಮೀನು ಅರ್ಜಿ ಸೋಮವಾರಕ್ಕೆ: ಎಸ್‌ಐಟಿಗೆ ಹಿಗ್ಗಾಮುಗ್ಗಾ ತರಾಟೆ; ವಕೀಲ ನಾಗೇಶ್‌ ವಾದ ಹೀಗಿತ್ತು!

Prajwal Revanna Case Hasanambe is going to destroy this government HD Kumaraswamy curse
ರಾಜಕೀಯ14 hours ago

Prajwal Revanna Case: ಈ ಸರ್ಕಾರವನ್ನು ಹಾಸನಾಂಬೆ ಧ್ವಂಸ ಮಾಡಲಿದ್ದಾಳೆ: ಎಚ್‌ಡಿಕೆ ಶಾಪ

Prajwal Revanna Case DK Shivakumar alleged mastermind in 25000 pen drive allotment
ಹಾಸನ15 hours ago

Prajwal Revanna Case: 25,000 ಪೆನ್ ಡ್ರೈವ್ ಹಂಚಿಕೆಯಲ್ಲಿ ಡಿ.ಕೆ. ಶಿವಕುಮಾರ್ ಮಾಸ್ಟರ್ ಮೈಂಡ್ ಎಂದು ರಾಜ್ಯಪಾಲರಿಗೆ ದೂರು!

SSLC Result 2024 what is the reason for most of the students fail in SSLC
ಕರ್ನಾಟಕ21 hours ago

SSLC Result 2024: ಎಸ್‌ಎಸ್‌ಎಲ್‌ಸಿಯಲ್ಲಿ ಹೆಚ್ಚಿನ ಮಕ್ಕಳು ಫೇಲ್‌ ಆಗಲು ಶಿಕ್ಷಣ ಇಲಾಖೆಯ ಈ ನಿರ್ಧಾರವೇ ಕಾರಣ!

Sslc exam Result 2024
ಶಿಕ್ಷಣ22 hours ago

SSLC Result 2024 : ಎಸ್‌ಎಸ್‌ಎಲ್‌ಸಿ ಪರೀಕ್ಷೆಯಲ್ಲಿ ಫೇಲಾದರೂ, ಕಡಿಮೆ ಅಂಕ ಬಂದರೂ ಡೋಂಟ್‌ ವರಿ; ಇನ್ನೂ ಇದೆ ಎರಡು ಚಾನ್ಸ್‌!

SSLC Result 2024 secret behind 20 percent grace marks
ಕರ್ನಾಟಕ22 hours ago

SSLC Result 2024: ಎಸ್‌ಎಸ್‌ಎಲ್‌ಸಿಯಲ್ಲಿ ಈ ಬಾರಿ ನೂರಕ್ಕೆ 25 ಅಂಕ ಪಡೆದವರೂ ಪಾಸ್! ಶೇ. 20 ಗ್ರೇಸ್ ಮಾರ್ಕ್ಸ್ ಕೊಟ್ಟಿದ್ದರ ಹಿಂದಿದೆ ಇಂಟರೆಸ್ಟಿಂಗ್ ಕತೆ!

SSLC Result 2024 78 schools get zero results in SSLC exams
ಬೆಂಗಳೂರು22 hours ago

SSLC Result 2024: ಎಸ್‌ಎಸ್‌ಎಲ್‌ಸಿ ಎಕ್ಸಾಂನಲ್ಲಿ ಸಿಕ್ಸರ್‌ ಬಾರಿಸಿದ ಗ್ರಾಮೀಣ ಪ್ರತಿಭೆಗಳು; 78 ಶಾಲೆಗಳಲ್ಲಿ ಶೂನ್ಯ ರಿಸಲ್ಟ್‌!

SSLC Result 2024 SSLC students get 20 percent grace marks but result is very poor
ಶಿಕ್ಷಣ23 hours ago

SSLC Result 2024: ಎಸ್‌ಎಸ್‌ಎಲ್‌ಸಿ ಮಕ್ಕಳಿಗೆ ಸಿಕ್ತು 20 ಪರ್ಸೆಂಟ್ ಗ್ರೇಸ್ ಮಾರ್ಕ್ಸ್‌! ಆದ್ರೂ ಫಲಿತಾಂಶ ತೀರಾ ಕಳಪೆ

SSLC Exam Result 2024 Announce
ಬೆಂಗಳೂರು1 day ago

SSLC Result 2024: ಎಸ್‌ಎಸ್‌ಎಲ್‌ಸಿ ಫಲಿತಾಂಶ ಪ್ರಕಟ; ಶೇ. 73.40 ವಿದ್ಯಾರ್ಥಿಗಳು ಪಾಸ್‌, ಉಡುಪಿ ಫಸ್ಟ್‌, ಯಾದಗಿರಿ ಲಾಸ್ಟ್‌

ಟ್ರೆಂಡಿಂಗ್‌