Puneeth Rajkumar: ಇಂದು ಪುನೀತ್‌ ಜನುಮದಿನ: ಅಪ್ಪು ಸಮಾಧಿ ಬಳಿ ಜನಸಾಗರ - Vistara News

ಸ್ಯಾಂಡಲ್ ವುಡ್

Puneeth Rajkumar: ಇಂದು ಪುನೀತ್‌ ಜನುಮದಿನ: ಅಪ್ಪು ಸಮಾಧಿ ಬಳಿ ಜನಸಾಗರ

Puneeth Rajkumar: ಬೆಳಗ್ಗೆ ಹತ್ತು ಗಂಟೆಗೆ ಕುಟುಂಬದಿಂದ ಸಮಾಧಿ ಪೂಜೆ ನೆರವೇರಲಿದೆ. ಯುವ ಮತ್ತು ವಿನಯ್ ಸೇರಿದಂತೆ ಇಡೀ ದೊಡ್ಮನೆ ಭಾಗಿಯಾಗಲಿದೆ. ಮಧ್ಯರಾತ್ರಿಯಿಂದಲೇ ಹಲವು ರೀತಿಯ ಕಾರ್ಯಕ್ರಮಗಳು ಕಂಠೀರವ ಸ್ಟುಡಿಯೋನಲ್ಲಿನ ಅಪ್ಪು ಸ್ಮಾರಕ ಬಳಿ ಪ್ರಾರಂಭವಾಗಿವೆ.

VISTARANEWS.COM


on

Puneeth Rajkumar spoorthi dina
ಮಹತ್ವದ, ಕುತೂಹಲಕರ ಸುದ್ದಿಗಾಗಿ ಫಾಲೊ ಮಾಡಿ
Koo

ಬೆಂಗಳೂರು: ಇಂದು (ಮಾ.17) ಪುನೀತ್‌ ರಾಜ್‌ಕುಮಾರ್‌ (Puneeth Rajkumar) ಅವರ ಜನುಮದಿನ. ಮುಂಜಾನೆಯಿಂದಲೇ ಅವರ ಸ್ಮಾರಕದ ಬಳಿ ಅಭಿಮಾನಿಗಳು ಸಾವಿರಾರು ಸಂಖ್ಯೆಯಲ್ಲಿ ನೆರೆದಿದ್ದಾರೆ. ಪುನೀತ್ ಸ್ಮಾರಕಕ್ಕೆ ಹೂವುಗಳಿಂದ ಅಲಂಕಾರಗೊಂಡಿದೆ. ಇಂದು 1 ಲಕ್ಷ ಜನಕ್ಕೆ ಯುವರಾಜ್ ಕುಮಾರ್ ಅನ್ನದಾನ ವ್ಯವಸ್ಥೆ ಮಾಡಿದ್ದಾರೆ. ಅಭಿಮಾನಿಗಳಿಗೆ ಸಮಾಧಿ ಬಳಿ ಚಿಕನ್ ಬಿರಿಯಾನಿ ಹಂಚಿಕೆ ಕೂಡ ಆಗಲಿದೆ. ಅಭಿಮಾನಿಗಳಿಂದ
ಅನ್ನದಾನ,ರಕ್ತದಾನ, ನೇತ್ರದಾನ ಶಿಬಿರ ಕೂಡ ನೆರವೇರಲಿದೆ. ಮಧ್ಯರಾತ್ರಿಯಿಂದಲೇ ಬರ್ತಡೆ ಸೆಲೆಬ್ರೇಷನ್ ಶುರು ಆಗಿದೆ.

ಬೆಳಗ್ಗೆ ಹತ್ತು ಗಂಟೆಗೆ ಕುಟುಂಬದಿಂದ ಸಮಾಧಿ ಪೂಜೆ ನೆರವೇರಲಿದೆ. ಯುವ ಮತ್ತು ವಿನಯ್ ಸೇರಿದಂತೆ ಇಡೀ ದೊಡ್ಮನೆ ಭಾಗಿಯಾಗಲಿದೆ. ಮಧ್ಯರಾತ್ರಿಯಿಂದಲೇ ಹಲವು ರೀತಿಯ ಕಾರ್ಯಕ್ರಮಗಳು ಕಂಠೀರವ ಸ್ಟುಡಿಯೋನಲ್ಲಿನ ಅಪ್ಪು ಸ್ಮಾರಕ ಬಳಿ ಪ್ರಾರಂಭವಾಗಿವೆ. ರಾತ್ರಿಯೇ ಕೇಕ್ ಕತ್ತರಿಸಿ ಅಭಿಮಾನಿಗಳು ಸಂಭ್ರಮಿಸಿದ್ದಾರೆ. ಅಂದಹಾಗೆ ಅಪ್ಪುವಿನ ಈ ಹುಟ್ಟುಹಬ್ಬವನ್ನು ‘ಸ್ಫೂರ್ತಿಯ ಹಬ್ಬ’ವನ್ನಾಗಿ ಆಚರಿಸುತ್ತಿರುವುದು ವಿಶೇಷ.

ಇದನ್ನೂ ಓದಿ: Puneeth Rajkumar: ಜಾಕಿ ರಿ-ರೀಲಿಸ್: ಥಿಯೇಟರ್‌ ಮುಂದೆ ಫ್ಯಾನ್ಸ್ ಸಖತ್‌ ಸೆಲೆಬ್ರೇಷನ್!

ಕೆಲವು ಕಲಾ ತಂಡಗಳು ಸಾಂಸ್ಕೃತಿಕ ಕಾರ್ಯಕ್ರಮವನ್ನು ಸಹ ಮಾಡಲಾಗಿವೆ. ಅಪ್ಪು ಸಿನಿಮಾದ ಹಾಡುಗಳು ಇಂದು ಸ್ಮಾರಕದ ಬಳಿ ಕೇಳಿ ಬರಲಿವೆ. ಬೆಂಗಳೂರಿನಲ್ಲಿ ಮಾತ್ರವೇ ಅಲ್ಲದೆ ಇಡೀ ರಾಜ್ಯದೆಲ್ಲೆಡೆ ಇಂದು ಅಪ್ಪು ಹುಟ್ಟುಹಬ್ಬವನ್ನು ಅದ್ಧೂರಿಯಾಗಿ ಆಚರಿಸಲಾಗುತ್ತಿದೆ. ರಾಜ್ಯದ ಹಲವು ನಗರಗಳಲ್ಲಿ ಅಭಿಮಾನಿಗಳು ಇಂದು ಅಪ್ಪು ಹುಟ್ಟುಹಬ್ಬವನ್ನು ಅದ್ಧೂರಿಯಾಗಿ ಆಚರಿಸುತ್ತಿದ್ದಾರೆ.

ನೃತ್ಯ ನಮನ

ಮಾರ್ಚ್ 17, ಪವರ್ ಸ್ಟಾರ್ ಪುನೀತ್ ರಾಜಕುಮಾರ್ ಅವರ ಹುಟ್ಟುಹಬ್ಬ. ಪುನೀತ್ ಅವರ ಹುಟ್ಟುಹಬ್ಬಕ್ಕೆ “ಗೌರಿ” ತಂಡದಿಂದ ವಿಶೇಷ ಗೀತೆಯೊಂದು ಬರಲಿದೆ. ಈ ವಿಶೇಷ ಗೀತೆಗೆ ಸಮರ್ಜಿತ್ ಲಂಕೇಶ್ ಜತೆ ದಕ್ಷಿಣ ಭಾರತದ ಖ್ಯಾತ ನಟಿ ತಾನ್ಯಾ ಹೋಪ್ ಹೆಜ್ಜೆ ಹಾಕಲಿದ್ದಾರೆ. ಮೋಹನ್ ಈ ಹಾಡಿಗೆ ನೃತ್ಯ ನಿರ್ದೇಶನ ಮಾಡುತ್ತಿದ್ದಾರೆ.

ಕ್ಷಣ ಕ್ಷಣದ ಮಾಹಿತಿಗಾಗಿ Vistara News FaceBook ಪೇಜ್ ಫಾಲೋ ಮಾಡಿ
ಮಹತ್ವದ ಮಾಹಿತಿಗಾಗಿ ವಿಸ್ತಾರ ನ್ಯೂಸ್ ಆ್ಯಪ್ ಉಚಿತವಾಗಿ ಡೌನ್ ಲೋಡ್ ಮಾಡಿಕೊಳ್ಳಿ: Andriod App | IOS App
Continue Reading
Click to comment

Leave a Reply

Your email address will not be published. Required fields are marked *

ಸ್ಯಾಂಡಲ್ ವುಡ್

Kiccha Sudeep: ʻಮ್ಯಾಕ್ಸ್‌ʼ ಸಿನಿಮಾ ಶೂಟಿಂಗ್‌ ಮುಗಿಸಿದ ಕಿಚ್ಚ ಸುದೀಪ್‌: ರಿಲೀಸ್‌ ಯಾವಾಗ?

Kiccha Sudeep ಬಿಗ್‌ ಅಪ್‌ಡೇಟ್‌ ಕೊಟ್ಟಿದ್ದಾರೆ ಕಿಚ್ಚ. ಇದೀಗ ಕಿಚ್ಚ ಸುದೀಪ್‌ ʻಮ್ಯಾಕ್ಸ್‌ʼ ಸಿನಿಮಾ ಶೂಟಿಂಗ್‌ ಕಂಪ್ಲೀಟ್‌ ಆಗಿದೆ ಎಂದು ಎಕ್ಸ್‌ ಮೂಲಕ ಮಾಹಿತಿ ಹಂಚಿಕೊಂಡಿದ್ದಾರೆ. ಮ್ಯಾಕ್ಸ್‌ನ 10 ತಿಂಗಳ ಸುದೀರ್ಘ ಪ್ರಯಾಣ ಅಂತ್ಯವಾಗಿದೆ ಎಂದು ವಿಡಿಯೊ ಮೂಲಕ ಶೇರ್‌ ಮಾಡಿಕೊಂಡಿದ್ದಾರೆ. ಮ್ಯಾಕ್ಸ್ ಸಿನಿಮಾದಲ್ಲಿ ಸುದೀಪ್ ಪೊಲೀಸ್‌ ಪಾತ್ರದಲ್ಲಿ ಮಿಂಚಲಿದ್ದಾರೆ. ಪಾತ್ರದ ಹೆಸರು ವಿಭಿನ್ನವಾಗಿಯೇ ಇದೆ. ʻಅರ್ಜುನ್ ಮಹಾಕ್ಷಯ್ʼ ಹೆಸರಿನ ಸುದೀಪ್ ಪಾತ್ರ ಸ್ಪೆಷಲ್ ಆಗಿಯೇ ಇರಲಿದೆ ಎಂದು ವರದಿಯಾಗಿದೆ.

VISTARANEWS.COM


on

Kiccha Sudeep Max Cinema shooting completed
Koo

ಬೆಂಗಳೂರು: ‘ವಿಕ್ರಾಂತ್ ರೋಣ’ ಬಳಿಕ ಕಿಚ್ಚ ಸುದೀಪ್ (Kiccha Sudeep) ಒಪ್ಪಿಕೊಂಡಿರುವ ಸಿನಿಮಾ ಮ್ಯಾಕ್ಸ್ (MAX). ಹೀಗಾಗಿ ಈ ಸಿನಿಮಾ ಬಗ್ಗೆ ಅವರ ಅಭಿಮಾನಿಗಳಲ್ಲಿ ಬಹಳಷ್ಟು ನಿರೀಕ್ಷೆಯಿದೆ. ‘ಮ್ಯಾಕ್ಸ್’ ಬಗ್ಗೆ ಏನಾದರೂ ಅಪ್‌ಡೇಟ್ ಕೊಡ್ತಾರ ಎಂದು ಕಿಚ್ಚ ಫ್ಯಾನ್ಸ್‌ ಕಾದಿದ್ದರು. ಇದೀಗ ಬಿಗ್‌ ಅಪ್‌ಡೇಟ್‌ ಕೊಟ್ಟಿದ್ದಾರೆ ಕಿಚ್ಚ. ಇದೀಗ ಕಿಚ್ಚ ಸುದೀಪ್‌ ʻಮ್ಯಾಕ್ಸ್‌ʼ ಸಿನಿಮಾ ಶೂಟಿಂಗ್‌ ಕಂಪ್ಲೀಟ್‌ ಆಗಿದೆ ಎಂದು ಎಕ್ಸ್‌ ಮೂಲಕ ಮಾಹಿತಿ ಹಂಚಿಕೊಂಡಿದ್ದಾರೆ. ಮ್ಯಾಕ್ಸ್‌ನ 10 ತಿಂಗಳ ಸುದೀರ್ಘ ಪ್ರಯಾಣ ಅಂತ್ಯವಾಗಿದೆ ಎಂದು ವಿಡಿಯೊ ಮೂಲಕ ಶೇರ್‌ ಮಾಡಿಕೊಂಡಿದ್ದಾರೆ.

ಕಿಚ್ಚ ಸುದೀಪ್‌ ಎಕ್ಸ್‌ನಲ್ಲಿ ʻʻಮಹಾಬಲಿಪುರಂನಲ್ಲಿ ʻಮ್ಯಾಕ್ಸ್‌ʼಗಾಗಿ ಒಂದು ಸುತ್ತು. ಸುದೀರ್ಘ 10 ತಿಂಗಳ ಪ್ರಯಾಣ. ನಾನು‌ ಪ್ರತಿ ಘಳಿಗೆಯನ್ನು ಆನಂದಿಸಿದೆ. ಸೆಟ್‌ನಲ್ಲಿ ಅದ್ಭುತ ತಂಡ ಮತ್ತು ಸುಂದರ ತಾರೆಯನ್ನು ಒಳಗೊಂಡಿತ್ತು. ಧನ್ಯವಾದಗಳು ಧನು ಸರ್. ನನ್ನನ್ನು ಚೆನ್ನಾಗಿ ಹೋಸ್ಟ್ ಮಾಡಿದ್ದಕ್ಕಾಗಿ ಧನ್ಯವಾದಗಳು, ವಿಜಯ್ ಮತ್ತು ಇಡೀ ತಂಡಕ್ಕೆ ಧನ್ಯವಾದʼʼಎಂದು ಬರೆದುಕೊಂಡಿದ್ದಾರೆ.

ಇದನ್ನೂ ಓದಿ: Kiccha Sudeep: ಕಿಚ್ಚ ಸುದೀಪ್ ಸಿನಿಮಾಗೆ ‘ಜೈಲರ್’ ಸ್ಟಂಟ್ ಮಾಸ್ಟರ್ ಎಂಟ್ರಿ!

ಇದಕ್ಕೂ ಕೆಲವು ದಿನಗಳ ಹಿಂದೆ ಟ್ರೈಲರ್ ರಫ್ ಕಟ್ ಆಗಿರುವ ಬಗ್ಗೆ ಸುದೀಪ್ ಮಾಹಿತಿ ಹಂಚಿಕೊಂಡಿದ್ದರು. ಸುದೀಪ್‌ ಎಕ್ಸ್‌ನಲ್ಲಿ ʻʻಮ್ಯಾಕ್ಸ್ (Max) ಕ್ಲೈಮ್ಯಾಕ್ಸ್‌ನ ಪ್ರಮುಖ ಭಾಗ ಪೂರ್ಣಗೊಳಿಸಲಾಗಿದೆ. ಇಲ್ಲಿಯವರೆಗೆ ಚಿತ್ರೀಕರಿಸಿದ ಅಷ್ಟೂ ಶಾಟ್‌ಗಳನ್ನು ನೋಡಿದೆ. ಚಿತ್ರದ ಪ್ರತಿ ಬಿಟ್ ನೋಡಿ, ತಂಡದ ಎಫರ್ಟ್‌ ಕಂಡು ಸಂತೋಷವಾಗಿದೆ. ಸ್ವಲ್ಪ ಭಾಗ ಚಿತ್ರೀಕರಣ ಬಾಕಿ ಇದೆ. ಟ್ರೈಲರ್ ವೇಳೆ ರಫ್ ಕಟ್ ಸಹ ನೋಡಿದೆ ಮತ್ತು ಅದು ನನ್ನನ್ನು ರೋಮಾಂಚನಗೊಳಿಸಿತುʼʼಎಂದು ಬರೆದುಕೊಂಡಿದ್ದರು.

ಮ್ಯಾಕ್ಸ್ ಸಿನಿಮಾದಲ್ಲಿ ಸುದೀಪ್ ಪೊಲೀಸ್‌ ಪಾತ್ರದಲ್ಲಿ ಮಿಂಚಲಿದ್ದಾರೆ. ಪಾತ್ರದ ಹೆಸರು ವಿಭಿನ್ನವಾಗಿಯೇ ಇದೆ. ʻಅರ್ಜುನ್ ಮಹಾಕ್ಷಯ್ʼ ಹೆಸರಿನ ಸುದೀಪ್ ಪಾತ್ರ ಸ್ಪೆಷಲ್ ಆಗಿಯೇ ಇರಲಿದೆ ಎಂದು ವರದಿಯಾಗಿದೆ. ʻಮ್ಯಾಕ್ಸ್ʼ ಸಿನಿಮಾದಲ್ಲಿ ಸುದೀಪ್ ಭರ್ಜರಿ ಸಾಹಸಗಳನ್ನ ಮಾಡಿದ್ದಾರೆ. ಸಾಹಸ ನಿರ್ದೇಶಕ ಚೇತನ್ ಡಿಸೋಜಾ ಈ ಸಾಹಗಳನ್ನ ಕಂಪೋಸ್ ಮಾಡಿದ್ದಾರೆ. ವಿಶೇಷವಾಗಿ ಚಿತ್ರದ ಕ್ಲೈಮ್ಯಾಕ್ಸ್‌ನಲ್ಲಿ ಭರ್ಜರಿ ಆ್ಯಕ್ಷನ್‌ಗಳೇ ಇವೆ ಎನ್ನಲಾಗಿದೆ.

ʻಮ್ಯಾಕ್ಸ್ʼ ಸಿನಿಮಾಕ್ಕೆ ಕನ್ನಡದ ತಾರೆಯರು ಇದ್ದಾರೆ. ಕನ್ನಡದ ಟೆಕ್ನಿಷನ್‌ಗಳೂ ಇದ್ದಾರೆ. ಹಾಗೆ ಅಜನೀಶ್ ಲೋಕನಾಥ್ ಈ ಚಿತ್ರಕ್ಕೆ ಸಂಗೀತ ಕೊಟ್ಟಿದ್ದಾರೆ. ಶೇಖರ್ ಚಂದ್ರ ಕ್ಯಾಮೆರಾ ವರ್ಕ್ ಮಾಡಿದ್ದಾರೆ. ಸಂಯುಕ್ತಾ ಹೊರನಾಡು, ಸುಕೃತಾ ವಾಗ್ಲೆ ಕೂಡ ಈ ಸಿನಿಮಾದಲ್ಲಿ ಇದ್ದಾರೆ.

ವರಲಕ್ಷ್ಮಿ ಶರತ್ ಕುಮಾರ್ ಕೂಡ ಈ ಚಿತ್ರದಲ್ಲಿ ನಟಿಸಿದ್ದಾರೆ. ವಿಜಯ್ ಕಾರ್ತಿಕೇಯ ಚಿತ್ರವನ್ನು ನಿರ್ದೇಶನ ಮಾಡಿದ್ದಾರೆ. ತಮಿಳು ನಿರ್ಮಾಪಕ ಕಲೈಪುಲಿ ಎಸ್. ತನು ಜೊತೆ ಸೇರಿ ಕಿಚ್ಚ ಕ್ರಿಯೇಷನ್ಸ್ ಬ್ಯಾನರ್‌ನಲ್ಲಿ ಸಿನಿಮಾ ನಿರ್ಮಾಣವಾಗುತ್ತಿದೆ.

Continue Reading

ಸ್ಯಾಂಡಲ್ ವುಡ್

A Movie Re-Release: ರೀ-ರಿಲೀಸ್ ಆಗ್ತಿದೆ ಉಪ್ಪಿಯ `A’ ಸಿನಿಮಾ : ನೆನಪುಗಳನ್ನು ಮೆಲುಕು ಹಾಕಿದ ನಟಿ ಚಾಂದಿನಿ!

A Movie Re-Release: “A” ಸಿನಿಮಾ ನಾಯಕಿ ಚಾಂದಿನಿ ಜೀವನವೆನ್ನೇ ಬದಲಿಸಿದ ಒಂದು ಸಿನಿಮಾ. ಕನ್ನಡ ಚಿತ್ರರಂಗದ ಒಂದು ಮೈಲಿಗಲ್ಲು ಸಿನಿಮಾ ಅಂದರೆ ತಪ್ಪಾಗಲಾರದು. ಈ ರೀತಿಯಲ್ಲೂ ಸಿನಿಮಾ ಮಾಡಬಹುದು ಎಂದು ಸಿನಿಮಾ ಜಗತ್ತಿಗೆ ಉಪೇಂದ್ರ ರವರು ತೋರಿಸಿಕೊಟ್ಟರು. ಈ ಸಿನಿಮಾ ಆ ಕಾಲಕ್ಕೆ ಹೇಗೆ ಪ್ರಸ್ತುತವೋ, ಈ ಕಾಲಕ್ಕೂ ಕೂಡ ಈ ಸಿನಿಮಾ ಸಲ್ಲುತ್ತದೆ.

VISTARANEWS.COM


on

A Movie Re-ReleaseActress Chandni relives memories
Koo

ಬೆಂಗಳೂರು: ಕನ್ನಡ ಚಿತ್ರರಂಗದ ಸಾರ್ವಕಾಲಿಕ ಸೂಪರ್ ಹಿಟ್ ಚಿತ್ರ ಉಪೇಂದ್ರ ನಿರ್ದೇಶನದ “A” ಸಿನಿಮಾ. ಉಪೇಂದ್ರ (A Movie Re-Release) ಅವರು ನಿರ್ದೇಶನದೊಂದಿಗೆ ನಾಯಕನಾಗೂ ನಟಿಸಿದ್ದ ಈ ಚಿತ್ರದ ನಾಯಕಿಯಾಗಿ ಚಾಂದಿನಿ ಅಭಿನಯಿಸಿದ್ದರು. 2024ರ ಮೇ 17ರಂದು (ಶುಕ್ರವಾರದಂದು) “A” ಚಿತ್ರ ರೀ ರಿಲೀಸ್ ಆಗುತ್ತಿದೆ. ಈ ಸಂದರ್ಭದಲ್ಲಿ ನಾಯಕಿ ಚಾಂದಿನಿ (Actress Chandini ) ಚಿತ್ರದ ನೆನಪುಗಳನ್ನು ಹಂಚಿಕೊಂಡಿದ್ದಾರೆ.

ಇದು ನಾಯಕಿ ಚಾಂದಿನಿ ಜೀವನವೆನ್ನೇ ಬದಲಿಸಿದ ಒಂದು ಸಿನಿಮಾ. ಕನ್ನಡ ಚಿತ್ರರಂಗದ ಒಂದು ಮೈಲಿಗಲ್ಲು ಸಿನಿಮಾ ಅಂದರೆ ತಪ್ಪಾಗಲಾರದು. ಈ ರೀತಿಯಲ್ಲೂ ಸಿನಿಮಾ ಮಾಡಬಹುದು ಎಂದು ಸಿನಿಮಾ ಜಗತ್ತಿಗೆ ಉಪೇಂದ್ರ ರವರು ತೋರಿಸಿಕೊಟ್ಟರು. ಈ ಸಿನಿಮಾ ಆ ಕಾಲಕ್ಕೆ ಹೇಗೆ ಪ್ರಸ್ತುತವೋ, ಈ ಕಾಲಕ್ಕೂ ಕೂಡ ಈ ಸಿನಿಮಾ ಸಲ್ಲುತ್ತದೆ.

ವರ್ಣಿಸಲು ಪದಗಳೇ ಇಲ್ಲ‌

ನಾಯಕಿ ಚಾಂದಿನಿ “A” ಸಿನಿಮಾದಲ್ಲಿ ಹೇಗಿದ್ದರೋ, ಈಗಲು ಹಾಗೆ ಇದ್ದಾರೆ. ಅದಕ್ಕೆ ಅವರು ನೀಡುವ ಕಾರಣ, ನನ್ನ ಜೀವನವನ್ನೇ ಬದಲಿಸಿದಂತಹ ಸಿನಿಮಾ ಅದು. ಅದರಿಂದ ನನಗೆ ಸಿಕ್ಕ ಕನ್ನಡ ಜನರ ಪ್ರೀತಿ ಹಾಗು ಆ ಸಿನಿಮಾದ ಅ ಒಂದು ಫೇಮಸ್ ಡೈಲಾಗ್ “GOD IS GREAT” ಅನ್ನುವ ಹಾಗೆ, ಈ ಎರೆಡರ ಆಶೀರ್ವಾದದಿಂದ ನಾನು ಇವತ್ತಿಗೂ “A” ಚಾಂದಿನಿ ರೀತಿಯಲ್ಲೆ ಇದ್ದೀನಿ. ಕಾಲಘಟ್ಟವನ್ನೂ ಮೀರಿದ ಒಂದು ಅಪ್ರತಿಮ ಪ್ರೇಮ ಕಥೆ “A” ಎನ್ನುತ್ತಾರೆ ನಾಯಕಿ.

ಇದನ್ನೂ ಓದಿ: Kangana Ranaut: ಲೋಕಸಭಾ ಚುನಾವಣೆ: ಕಂಗನಾ ʻಎಮರ್ಜೆನ್ಸಿʼ ಸಿನಿಮಾ ಮತ್ತೆ ಪೋಸ್ಟ್‌ಪೋನ್‌!

ʻʻನಿರ್ದೇಶಕ ಉಪೇಂದ್ರ ಅವರ ನಿರ್ದೇಶನದ ಬಗ್ಗೆ ವರ್ಣಿಸಲು ಪದಗಳೇ ಇಲ್ಲ‌. ಅಂದಿಗು ಇಂದಿಗೂ ನನ್ನ ಮೆಚ್ಚಿನ ನಿರ್ದೇಶಕ ಉಪೇಂದ್ರ ಅವರು. ಗುರುಕಿರಣ್ ಅವರ ಸಂಗೀತದಲ್ಲಿ ಮೂಡಿಬಂದಿರುವ “A” ಚಿತ್ರದ ಹಾಡುಗಳು ಈಗಲೂ ಜನಪ್ರಿಯ. ಕನ್ನಡಿಗರು “A” ಚಿತ್ರದಿಂದ ಇಲ್ಲಿಯವರೆಗೂ ನನಗೆ ತೋರುತ್ತಿರುವ ಪ್ರೀತಿಗೆ ಚಿರ ಋಣಿ. ಇಂತಹ ಸೂಪರ್ ಹಿಟ್ ಚಿತ್ರದಲ್ಲಿ ನಟಿಸಲು ಅವಕಾಶ ನೀಡಿದ ನಿರ್ಮಾಪಕರಿಗೆ ಹಾಗೂ ನಿರ್ದೇಶಕರಿಗೆ ಧನ್ಯವಾದ. ಮೇ 17 ಚಿತ್ರ ರೀ ರಿಲೀಸ್ ಆಗುತ್ತಿದೆ. ಈಗಲೂ ಭರ್ಜರಿ ಯಶಸ್ಸು ಕಾಣಲಿದೆ ಎಂದು ತಿಳಿಸಿದ ನಾಯಕಿ ಚಾಂದಿನಿ, ಒಳ್ಳೆಯ ಕಥೆ ಸಿಕ್ಕರೆ ಕನ್ನಡ ಚಿತ್ರಗಳಲ್ಲಿ ನಟಿಸುತ್ತೇನೆʼʼಎಂದಿದ್ದಾರೆ.

ತನ್ನ ವಿಭಿನ್ನ ಶೀರ್ಷಿಕೆಯಿಂದಲೇ ಆ ಕಾಲದಲ್ಲಿ ಸಿನಿ ಪ್ರೇಕ್ಷಕರ ಗಮನ ಸೆಳೆದಿದ್ದ ಚಿತ್ರ ʼಎʼ. ಅದುವರೆಗೆ ನಿರ್ದೇಶಕನಾಗಿ ಹಾಗೂ ಸಿನಿಮಾಗಳಲ್ಲಿ ಅತಿಥಿ ಪಾತ್ರಗಳಲ್ಲಿ ಕಾಣಿಸಿಕೊಳ್ಳುತ್ತಿದ್ದ ಉಪೇಂದ್ರ ಈ ಚಿತ್ರದ ಮೂಲಕ ನಾಯಕನಾಗಿಯೂ ಪರಿಚಿತರಾದರು. ವಿಭಿನ್ನ ಕಥಾ ಹಂದರ, ಮೇಕಿಂಗ್‌ ಶೈಲಿಯಿಂದ ಈ ಚಿತ್ರ ನೋಡುಗರನ್ನು ಆಕರ್ಷಿಸಿತ್ತು. ನಾಯಕಿಯಾಗಿ ಚಾಂದಿನಿ ಕಾಣಿಸಿಕೊಂಡ ಈ ಸಿನಿಮಾ ಸಾಂಪ್ರದಾಯಿಕ ಕಟ್ಟು-ಕಟ್ಟಳೆಗಳನ್ನು ಮುರಿದು ಪ್ರಯೋಗಾತ್ಮಕ ಚಿತ್ರ ಎನಿಸಿಕೊಂಡಿತ್ತು.

ಹಿಟ್‌ ಚಿತ್ರ

ಒಬ್ಬ ನಿರ್ದೇಶಕ ಹಾಗೂ ನಾಯಕಿಯ ನಡುವಿನ ಪ್ರೇಮಕಥೆಯನ್ನೆ ಈ ಚಿತ್ರ ಆಧರಿಸಿತ್ತು. ಆದರೆ ಅದನ್ನೇ ಉಪೇಂದ್ರ ವಿಭಿನ್ನವಾಗಿ ತೆರೆ ಮೇಲೆ ತಂದಿದ್ದರು. ಎಲ್ಲವನ್ನೂ ರಿವರ್ಸ್ ಸ್ಕ್ರೀನ್ ಪ್ಲೇಯಲ್ಲಿ ಉಪೇಂದ್ರ ಹೇಳಿದ್ದರು. ಈ ಪ್ರಯೋಗವನ್ನು ವೀಕ್ಷಕರೂ ಮೆಚ್ಚಿಕೊಂಡಿದ್ದರು. ಆ ಮೂಲಕ ಉಪೇಂದ್ರ ಎಂಬ ನಿರ್ದೇಶಕ ಮತ್ತು ನಟ ಗೆಲುವು ಸಾಧಿಸಿದ್ದರು. ಪರಿಣಾಮ ಸೂಪರ್‌ ಚಿತ್ರ ಹಿಟ್‌ ಆಗಿತ್ತು. ಜತೆಗೆ ಸಂಭಾಷಣೆಯೂ ಮೆಚ್ಚುಗೆ ಗಳಿಸಿತ್ತು.

ಮೋಡಿ ಮಾಡಿದ ಸಂಗೀತ

ಚಿತ್ರದ ಯಶಸ್ಸಿನಲ್ಲಿ ಸಂಗೀತದ ಪಾತ್ರವೂ ಮುಖ್ಯವಾಗಿತ್ತು. ಸಿನಿಮಾದ ಹಾಡುಗಳು ಇಂದಿಗೂ ಜನಪ್ರಿಯ. ವಿಶೇಷ ಎಂದರೆ ಗುರು ಕಿರಣ್‌ ʼಎʼ ಸಿನಿಮಾದ ಮೂಲಕ ಮೊದಲ ಬಾರಿ ಸಂಗೀತ ಸಂಯೋಜನೆ ಮಾಡಿದ್ದರು. ಮೊದಲ ಸಿನಿಮಾದಲ್ಲೇ ಸಿಕ್ಸರ್‌ ಭಾರಿಸಿದ್ದರು. ʼಸುಮ್‌ ಸುಮ್ನೆʼ, ʼಚಾಂದಿನಿʼ, ʼಹೇಳ್‌ಕೊಳ್ಳೊಕೆ ಒಂದೂರುʼ, ʼಇದು ಒನ್‌ ಡೇ ಮ್ಯಾಚ್‌ʼ, ʼಮಾರಿ ಕಣ್ಣುʼ ಹೀಗೆ ಸಿನಿಮಾದ ಎಲ್ಲ ಹಾಡುಗಳೂ ಹಿಟ್‌ ಆಗಿದ್ದವು. ಇಂದಿಗೂ ಈ ಹಾಡುಗಳನ್ನು ಸಿನಿ ಪ್ರೇಮಿಗಳು ಗುನುಗುತ್ತಿರುತ್ತಾರೆ. ಸುಮಾರು 2 ಕೋಟಿ ರೂ. ವೆಚ್ಚದಲ್ಲಿ ತಯಾರಾದ ಸಿನಿಮಾ ಸುಮಾರು 20 ಕೋಟಿ ರೂ. ಗಳಿಸಿತ್ತು ಎನ್ನಲಾಗಿದೆ.

ಈ ಮಧ್ಯೆ ಹಲವು ವರ್ಷಗಳ ಬಳಿಕ ಉಪೇಂದ್ರ ನಿರ್ದೇಶನಕ್ಕೆ ಇಳಿದಿರುವ ʼಯುಐʼ ಚಿತ್ರ ತೆರೆಗೆ ಬರಲು ಸಜ್ಜಾಗಿದೆ. ಈಗಾಗಲೇ ಚಿತ್ರದ ʼಟ್ರೋಲ್‌ ಆಗುತ್ತೆʼ ಹಾಡು ಸೂಪರ್‌ ಹಿಟ್‌ ಆಗಿದ್ದು, ಸಿನಿಮಾ ರಿಲೀಸ್‌ಗೆ ಅಭಿಮಾನಿಗಳು ಕಾತುರದಿಂದ ಕಾಯುತ್ತಿದ್ದಾರೆ. ಕನ್ನಡದ ಜತೆಗೆ ವಿವಿಧ ಭಾಷೆಗಳಲ್ಲಿಯೂ ʼಯುಐʼ ತೆರೆಗೆ ಬರಲಿದೆ.

Continue Reading

ಸಿನಿಮಾ

777 Charlie: 6 ಮುದ್ದಾದ ಮರಿಗಳಿಗೆ ಜನ್ಮ ನೀಡಿದ ಚಾರ್ಲಿ: ರಕ್ಷಿತ್‌ ಶೆಟ್ಟಿ ಸರ್‌ಪ್ರೈಸ್‌ ಲೈವ್‌ !

777 Charlie: 2022ರ ಜೂನ್​ 10ರಂದು ‘777 ಚಾರ್ಲಿ’ ಸಿನಿಮಾ ಬಿಡುಗಡೆ ಆಗಿತ್ತು. ಸಿನಿಮಾದಲ್ಲಿ ಚಾರ್ಲಿ ಮುಖ್ಯ ಪಾತ್ರ ವಹಿಸಿತ್ತು. ಸಿನಿಮಾದ ಕ್ಲೈಮ್ಯಾಕ್ಸ್​ನಲ್ಲಿ ಮರಿಗಳಿಗೆ ಚಾರ್ಲಿ ಜನ್ಮ ನೀಡಿತ್ತು. ಆದರೆ ರಿಯಲ್​ ಲೈಫ್​ನಲ್ಲಿ ಇಷ್ಟು ವರ್ಷ ಕಳೆದರೂ ಚಾರ್ಲಿಗೆ ತಾಯಿ ಆಗುವ ಸಮಯ ಬಂದಿರಲಿಲ್ಲ. ಈಗ ಅದು ನೆರವೇರಿದೆ. ಈ ಚಿತ್ರದಲ್ಲಿ ಚಾರ್ಲಿಯ ಹೃದಯಸ್ಪರ್ಶಿ ಅಭಿನಯ ರಕ್ಷಿತ್ ಶೆಟ್ಟಿ ಅಭಿಮಾನಿಗಳು ಮಾತ್ರವಲ್ಲದೆ ಪ್ಯಾನ್-ಇಂಡಿಯಾ ಪ್ರೇಕ್ಷಕರನ್ನೂ ಗೆದ್ದಿತ್ತು. ಇದೀಗ ಚಾರ್ಲಿ ಚಾರ್ಲಿಯಾಗಿರುವ ಸುದ್ದಿಯನ್ನು ಅಭಿಮಾನಿಗಳೊಂದಿಗೆ ರಕ್ಷಿತ್ ಶೆಟ್ಟಿ ಲೈವ್ ನಲ್ಲಿ ಹಂಚಿಕೊಂಡಿದ್ದಾರೆ.

VISTARANEWS.COM


on

777 Charlie Dog Gives Birth To 6 Puppies Rakshit Shetty on live
Koo

‘777 ಚಾರ್ಲಿ’ (777 Charlie) ಸಿನಿಮಾದಲ್ಲಿ ನಟಿಸಿದ ಚಾರ್ಲಿ ಈಗ ತಾಯಿ ಆಗಿದೆ. 6 ಮರಿಗಳಿಗೆ ಜನ್ಮ ನೀಡಿದೆ.

ನಟ ರಕ್ಷಿತ್ ಶೆಟ್ಟಿ (Rakshit Shetty) ಅವರು ಇನ್​ಸ್ಟಾಗ್ರಾಮ್​ನಲ್ಲಿ ಲೈವ್​ ಬಂದು ಅಭಿಮಾನಿಗಳಿಗೆ ಗುಡ್​ ನ್ಯೂಸ್​ ಹಂಚಿಕೊಂಡಿದ್ದಾರೆ.

ಇದನ್ನೂ ಓದಿ: Cannes 2024: ʻಕಾನ್ ಫಿಲ್ಮ್ ಫೆಸ್ಟಿವಲ್‌ʼನಲ್ಲಿ ಪ್ರದರ್ಶನ ಕಾಣಲಿರುವ ಭಾರತೀಯ ಸಿನಿಮಾಗಳಿವು

2022ರ ಜೂನ್​ 10ರಂದು ‘777 ಚಾರ್ಲಿ’ ಸಿನಿಮಾ ಬಿಡುಗಡೆ ಆಗಿತ್ತು. ಸಿನಿಮಾದಲ್ಲಿ ಚಾರ್ಲಿ ಮುಖ್ಯ ಪಾತ್ರ ವಹಿಸಿತ್ತು. ಸಿನಿಮಾದ ಕ್ಲೈಮ್ಯಾಕ್ಸ್​ನಲ್ಲಿ ಮರಿಗಳಿಗೆ ಚಾರ್ಲಿ ಜನ್ಮ ನೀಡಿತ್ತು. ಆದರೆ ರಿಯಲ್​ ಲೈಫ್​ನಲ್ಲಿ ಇಷ್ಟು ವರ್ಷ ಕಳೆದರೂ ಚಾರ್ಲಿಗೆ ತಾಯಿ ಆಗುವ ಸಮಯ ಬಂದಿರಲಿಲ್ಲ. ಈಗ ಅದು ನೆರವೇರಿದೆ.

ರಕ್ಷಿತ್‌ ಶೆಟ್ಟಿ ಲೈವ್‌ಗೆ ಬಂದು ಮಾತನಾಡಿ ʻʻ777 ಚಾರ್ಲಿ ಸಿನಿಮಾ ಬಿಡುಗಡೆಯಾಗಿ 2 ವರ್ಷ ಆಗುತ್ತ ಬಂತು. ಒಂದು ವೇಳೆ ಚಾರ್ಲಿ ತಾಯಿಯಾದರೆ ಈ ಜರ್ನಿಗೆ ಒಂದು ಅರ್ಥ ಬರುತ್ತೆ ಎಂದು ನಾವು ಅದೆಷ್ಟೋ ಬಾರಿ ಯೋಚಿಸಿದ್ದೇವು. ಕಿರಣ್‌ ರಾಜ್‌ ನಾವೆಲ್ಲ ಚಾರ್ಲಿ ತಾಯಿಯಾಗಬೇಕು ಎಂದು ಕಾದಿದ್ದೆವುʼʼಎಂದರು.

ʻʻಪ್ರಮೋದ್‌ ಜತೆ ಚಾರ್ಲಿ ಇರುತ್ತದೆ. ಅವರು ಕಾಲ್‌ ಮಾಡಿದಾಗೆಲ್ಲ ಕೇಳುತ್ತಿದ್ದೆ. ಅದಕ್ಕೆ ವಯಸ್ಸು ಆಗಿದ್ದರಿಂದ ಏನಾಗತ್ತೋ ಗೊತ್ತಿಲ್ಲ ಅಂತ ಅವರು ಹೇಳುತ್ತಿದ್ದರು. ಮೇ 9ರಂದು ಚಾರ್ಲಿ 6 ಮರಿಗಳಿಗೆ ಜನ್ಮ ನೀಡಿದೆ. ಹಾಗಾಗಿ ಚಾರ್ಲಿ ಮತ್ತು ಅದರ ಮರಿಗಳನ್ನು ನೋಡಲು ನಾನು ಮೈಸೂರಿಗೆ ಬಂದೆ’ ಎಂದಿದ್ದಾರೆ ರಕ್ಷಿತ್​ ಶೆಟ್ಟಿ.

Continue Reading

ಸ್ಯಾಂಡಲ್ ವುಡ್

Kannada New Movie: ಬರಗೂರು ರಾಮಚಂದ್ರಪ್ಪ ನಿರ್ದೇಶನದ ‘ಸ್ವಪ್ನ ಮಂಟಪ’ ಚಿತ್ರೀಕರಣ ಮುಕ್ತಾಯ

Kannada New Movie: ‘ಸ್ವಪ್ನ ಮಂಟಪ’ ಚಿತ್ರವು ಈಗಾಗಲೇ ಚಿತ್ರೀಕರಣ ಮತ್ತು ಡಬ್ಬಿಂಗ್ ಕೆಲಸಗಳನ್ನು ಮುಗಿಸಿದೆ. ಕನಕಪುರ ರಸ್ತೆಯ ಒಂದು ಹಳ್ಳಿಯಲ್ಲಿ ಚಿತ್ರೀಕರಣವನ್ನು ಮಾಡಲಾಗಿದೆ. ಹೊಸಮನೆ ಮೂರ್ತಿಯವರು ಈ ಸೆಟ್ ನಿರ್ಮಾಣ ಮಾಡಿದ್ದಾರೆ.ಬರಗೂರು ರಾಮಚಂದ್ರಪ್ಪನವರೇ ಚಿತ್ರಕತೆ, ಸಂಭಾಷಣೆ, ಗೀತರಚನೆ ಮಾಡಿ ನಿರ್ದೇಶನ ಮಾಡಿದ್ದಾರೆ.

VISTARANEWS.COM


on

Kannada New Movie swapna mantapa shooting compleated
Koo

ಬೆಂಗಳೂರು: ಮೈಸೂರಿನ ಬಾಬು ನಾಯ್ಕ್ ಅವರು ತಮ್ಮ ಮಲೈಮಹದೇಶ್ವರ ಎಂಟರ್‌ಪ್ರೈಸಿಸ್‌ ಸಂಸ್ಥೆಯಿಂದ (Kannada New Movie) ‘ಸ್ವಪ್ನ ಮಂಟಪ’ ಎಂಬ ಕನ್ನಡ ಚಿತ್ರವನ್ನು ನಿರ್ಮಿಸುತ್ತಿದ್ದಾರೆ. ಈ ಚಿತ್ರವು ಬರಗೂರು ರಾಮಚಂದ್ರಪ್ಪನವರ ಅದೇ ಹೆಸರಿನ ಕಾದಂಬರಿಯನ್ನು ಆಧರಿಸಿದೆ. ಬರಗೂರು ರಾಮಚಂದ್ರಪ್ಪನವರೇ ಚಿತ್ರಕತೆ, ಸಂಭಾಷಣೆ, ಗೀತರಚನೆ ಮಾಡಿ ನಿರ್ದೇಶನ ಮಾಡಿದ್ದಾರೆ.

‘ಸ್ವಪ್ನ ಮಂಟಪ’ ಚಿತ್ರವು ಈಗಾಗಲೇ ಚಿತ್ರೀಕರಣ ಮತ್ತು ಡಬ್ಬಿಂಗ್ ಕೆಲಸಗಳನ್ನು ಮುಗಿಸಿದೆ. ಕನಕಪುರ ರಸ್ತೆಯ ಒಂದು ಹಳ್ಳಿಯಲ್ಲಿ ಚಿತ್ರೀಕರಣವನ್ನು ಮಾಡಲಾಗಿದೆ. ಹೊಸಮನೆ ಮೂರ್ತಿಯವರು ಈ ಸೆಟ್ ನಿರ್ಮಾಣ ಮಾಡಿದ್ದಾರೆ.

‘ಸ್ವಪ್ನ ಮಂಟಪ’ ಚಿತ್ರವು ಪಾರಂಪರಿಕ ಸ್ಥಳಗಳ ರಕ್ಷಣೆಯನ್ನು ಪ್ರತಿಪಾದಿಸುವ ಕಥಾವಸ್ತುವನ್ನು ಒಳಗೊಂಡಿದೆ. ಒಂದು ಹಳ್ಳಿಯಲ್ಲಿ ರಾಜನೊಬ್ಬ ನಿರ್ಮಿಸಿದ ಸ್ವಪ್ನ ಮಂಟಪವನ್ನು ಕೆಡವಿ ಹಾಕುವ ಪ್ರಯತ್ನವನ್ನು ಕೆಲವರು ಮಾಡಿದಾಗ , ಕಥಾನಾಯಕ ಮತ್ತು ನಾಯಕಿ ಜನರನ್ನು ಸಂಘಟಿಸಿ ಸ್ವಪ್ನಮಂಟಪವನ್ನು ಉಳಿಸಿ ಸರ್ಕಾರದ ಅಧಿಕೃತ ಸ್ಮಾರಕದ ಪಟ್ಟಿಗೆ ಸೇರಿಸುವ ಮೂಲಕ ಚಾರಿತ್ರಿಕ ಸ್ಮಾರಕಗಳ ಪರಂಪರೆಯನ್ನು ಎತ್ತಿ ಹಿಡಿಯುತ್ತಾರೆ. ಈ ಸಾಮಾಜಿಕ ಚಿತ್ರದಲ್ಲಿ ಸ್ವಪ್ನ ಮಂಟಪವನ್ನು ನಿರ್ಮಾಣ ಮಾಡಿದ ರಾಜ-ರಾಣಿ ಯರ ಕಥನವನ್ನೂ ಹಿನ್ನೋಟ ತಂತ್ರದಲ್ಲಿ ಸೇರಿಸಿರುವುದು ಒಂದು ವಿಶೇಷ.

ಇದನ್ನೂ ಓದಿ: Kannada New Movie: `ಕುಂಟೆಬಿಲ್ಲೆ’ ಸಿನಿಮಾದ ಮುಹೂರ್ತ: ಶುಭಕೋರಿದ ಗಣ್ಯರು

ನಾಯಕ ಮತ್ತು ನಾಯಕಿಯ ಪಾತ್ರದಲ್ಲಿ ಕ್ರಮವಾಗಿ ವಿಜಯ ರಾಘವೇಂದ್ರ ಮತ್ತು ರಂಜಿನಿ ರಾಘವನ್ ಅಭಿನಯಿಸಿದ್ದಾರೆ. ಇವರಿಬ್ಬರೂ ದ್ವಿಪಾತ್ರಗಳಲ್ಲಿ ಅಭಿನಯಿಸಿರುವುದು ಸಿನಿಮಾದ ಒಂದು ವಿಶೇಷ. ಜತೆಗೆ ಸುಂದರರಾಜ್, ಶೋಭಾರಾಘವೇಂದ್ರ, ರಜನಿ, ಮಹಾಲಕ್ಷ್ಮೀ, ಸುಂದರರಾಜ ಅರಸು, ರಾಜಪ್ಪದಳವಾಯಿ, ಅಂಬರೀಶ ಸಾರಂಗಿ, ಮೈಸೂರು ಮಂಜುಳ, ಉಮ್ಮತ್ತೂರು ಬಸವರಾಜು, ವೆಂಕಟರಾಜು, ಶಿವಲಿಂಗಪ್ರಸಾದ್, ಭಾರತಿರಮೇಶ್, ಗುಂಡಿ ರಮೇಶ್ ಮುಂತಾದವರು ತಾರಾಗಣದಲ್ಲಿ ಇದ್ದಾರೆ.

ಬಾಬುನಾಯ್ಕ್ ನಿರ್ಮಾಣ ಮತ್ತು ಬರಗೂರರ ನಿರ್ದೇಶನದ ಈ ಚಿತ್ರವು ನಾಗರಾಜ ಆದವಾನಿ ಛಾಯಗ್ರಹಣ, ಸುರೇಶ್ ಅರಸು ಸಂಕಲನ, ಶಮಿತಾ ಮಲ್ನಾಡ್ ಸಂಗೀತ ನಿರ್ದೇಶನ ಮತ್ತು ತ್ರಿಭುವನ್ ನೃತ್ಯ ಸಂಯೋಜನೆಯನ್ನು ಒಳಗೊಂಡಿದೆ. ನಟರಾಜ್ ಶಿವು ಮತ್ತು ಪ್ರವೀಣ್ ಸಹನಿರ್ದೇಶಕರಾಗಿದ್ದಾರೆ.

Continue Reading
Advertisement
Prajwal Revanna Case pen drive and hard disk were found during the raids in Hassan and Bengaluru
ಕ್ರೈಂ6 mins ago

Prajwal Revanna Case: ಹಾಸನ, ಬೆಂಗಳೂರು ದಾಳಿ ವೇಳೆ ಸಿಕ್ಕ ಪೆನ್‌ಡ್ರೈವ್‌, ಹಾರ್ಡ್‌ ಡಿಸ್ಕ್‌ ಎಷ್ಟು? ಎಫ್‌ಎಸ್‌ಎಲ್‌ಗೆ ರವಾನೆ

Chandu Champion Injured Kartik Aaryan looks intense
ಸಿನಿಮಾ11 mins ago

Chandu Champion: ಗುರುತೇ ಸಿಗದಂತೆ ಬದಲಾದ ಈ ಸ್ಟಾರ್‌ ನಟ ಯಾರು? ಪೋಸ್ಟರ್​ ವೈರಲ್​!

Money Guide
ಮನಿ-ಗೈಡ್20 mins ago

Money Guide: ಎನ್‌ಪಿಎಸ್‌ಗೆ 15 ವರ್ಷ; ಇಲ್ಲಿದೆ ಯೋಜನೆಯ ಸಂಪೂರ್ಣ ವಿವರ

Hoarding Collapse
ದೇಶ26 mins ago

Hoarding Collapse: 16 ಜನರ ಸಾವಿಗೆ ಕಾರಣವಾದ ಯಮಸ್ವರೂಪಿ ಹೋರ್ಡಿಂಗ್‌ ಕುಸಿತದ ವಿಡಿಯೊ ಇಲ್ಲಿದೆ!

Covaxin
ದೇಶ32 mins ago

Covaxin: ಕೋವಾಕ್ಸಿನ್‌ ಲಸಿಕೆ ಪಡೆದವರಿಗೂ ಬಿಗ್‌ ಶಾಕ್‌! ಆಘಾತಕಾರಿ ವರದಿ ಔಟ್‌

T20 World Cup 2024
ಕ್ರೀಡೆ57 mins ago

T20 World Cup 2024: ಟಿ20 ವಿಶ್ವಕಪ್​ನಲ್ಲಿ ‘ನಂದಿನಿ’ ಲಾಂಛನ; ಹರ್ಷ ವ್ಯಕ್ತಪಡಿಸಿದ ಸಿದ್ದರಾಮಯ್ಯ

pm narendra modi yogi adityanath
ಪ್ರಮುಖ ಸುದ್ದಿ1 hour ago

PM Narendra Modi: ʼಗೂಂಡಾರಾಜ್‌ʼ ನೆನಪಿಸಿದ ಮೋದಿ, ಉ.ಪ್ರದಲ್ಲಿ ʼಯೋಗಿ ಸ್ವಚ್ಛತಾ ಅಭಿಯಾನʼಕ್ಕೆ ಮೆಚ್ಚುಗೆ

Viral video
ವೈರಲ್ ನ್ಯೂಸ್1 hour ago

Viral Video: ಪನೀರ್‌ ಬಿರಿಯಾನಿಯಲ್ಲಿ ಚಿಕನ್‌ ಪೀಸ್‌.. ಜೊಮ್ಯಾಟೊದಿಂದ ಮತ್ತೊಂದು ಎಡವಟ್ಟು

Head Coach
ಕ್ರೀಡೆ2 hours ago

Head Coach: ದ್ರಾವಿಡ್ ಬಳಿಕ ಕೋಚ್ ಹುದ್ದೆ ನಿರಾಕರಿಸಿದ ಟೀಮ್​ ಇಂಡಿಯಾದ ಸ್ಟಾರ್​ ಮಾಜಿ ಆಟಗಾರ

Drowned in water
ಹಾಸನ2 hours ago

Drowned in water : ಕೆರೆಯಲ್ಲಿ ಈಜಲು ಹೋದ ನಾಲ್ವರು ನೀರುಪಾಲು; ಓರ್ವ ಬಾಲಕ ಪಾರು

Sharmitha Gowda in bikini
ಕಿರುತೆರೆ7 months ago

Geetha Serial Kannada: ನಿದ್ದೆ ಕದ್ದ ಚೋರಿ! ನಟಿ `ಭಾನುಮತಿ’ ಹಾಟ್‌ ಪೋಟೊಗಳಿಗೆ ಫ್ಯಾನ್ಸ್ ಫುಲ್ ಫಿದಾ

Kannada Serials
ಕಿರುತೆರೆ7 months ago

Kannada Serials TRP: 2ನೇ ಸ್ಥಾನದಲ್ಲಿ 2 ಧಾರಾವಾಹಿಗಳು; ಟಿಆರ್‌ಪಿ ರೇಸ್‌ನಲ್ಲಿಲ್ಲ ಭಾಗ್ಯಲಕ್ಷ್ಮೀ!

Bigg Boss- Saregamapa 20 average TRP
ಕಿರುತೆರೆ7 months ago

Kannada Serials TRP: ಏಳನೇ ಸ್ಥಾನಕ್ಕೆ ʻಅಮೃತಧಾರೆʼ ಕುಸಿತ; ಬಿಗ್‌ ಬಾಸ್‌-ಸರಿಗಮಪ ಟಿಆರ್‌ಪಿ ಎಷ್ಟು?

galipata neetu
ಕಿರುತೆರೆ6 months ago

Kanyadana Serial: ಕಿರುತೆರೆಗೆ ಮತ್ತೆ ಎಂಟ್ರಿ ಕೊಟ್ಟ ʻಗಾಳಿಪಟʼ ಖ್ಯಾತಿಯ ʻನೀತುʼ!

Kannada Serials
ಕಿರುತೆರೆ8 months ago

Kannada Serials TRP: ನಾಲ್ಕನೇ ಸ್ಥಾನಕ್ಕೆ ಕುಸಿತ ಕಂಡ ʻಸೀತಾ ರಾಮʼ; ಟಿಆರ್‌ಪಿ ರೇಸ್‌ಗೆ ʻಭಾಗ್ಯಲಕ್ಷ್ಮಿʼ ಬ್ಯಾಕ್‌!

Kannada Serials
ಕಿರುತೆರೆ7 months ago

Kannada Serials TRP: ಟಿಆರ್‌ಪಿಯಲ್ಲಿ ʻಭಾಗ್ಯಲಕ್ಷ್ಮೀʼ ಹವಾ; ʻಪುಟ್ಟಕ್ಕನ ಮಕ್ಕಳುʼ ಧಾರಾವಾಹಿಗೆ ಸಂಕಷ್ಟ!

Bigg Boss' dominates TRP; Sita Rama fell to the sixth position
ಕಿರುತೆರೆ7 months ago

Kannada Serials TRP: ಟಿಆರ್‌ಪಿಯಲ್ಲಿ ʻಬಿಗ್ ಬಾಸ್ʼದೇ ಮೇಲುಗೈ; 6ನೇ ಸ್ಥಾನಕ್ಕೆ ಕುಸಿದ ʻಸೀತಾ ರಾಮʼ

geetha serial Dhanush gowda engagement
ಕಿರುತೆರೆ5 months ago

Dhanush Gowda: ಗೀತಾ ಧಾರಾವಾಹಿ ನಟನ ನಿಶ್ಚಿತಾರ್ಥ; ಭವ್ಯಾಳ ಕಮೆಂಟ್‌ ಬಾಕ್ಸ್‌ ಆಫ್‌!

varun
ಕಿರುತೆರೆ6 months ago

Brindavana Serial: ʼಬೃಂದಾವನʼ ಧಾರಾವಾಹಿಯಲ್ಲಿ ದೊಡ್ಡ ಟ್ವಿಸ್ಟ್‌; ಪ್ರಮುಖ ಪಾತ್ರಧಾರಿಯೇ ಬದಲು

Kannada Serials
ಕಿರುತೆರೆ8 months ago

Kannada Serials TRP: ಟಿಆರ್‌ಪಿಯಲ್ಲಿ ಏರಿಕೆ ಕಂಡ ʻಅಮೃತಧಾರೆʼ; ʻಗಟ್ಟಿಮೇಳʼಕ್ಕೆ ನಾಲ್ಕನೇ ಸ್ಥಾನ!

Prajwal Revanna Case
ಕರ್ನಾಟಕ1 day ago

Prajwal Revanna Case: ಪ್ರಜ್ವಲ್‌ ರೇವಣ್ಣ ಇಂದೇ ಜರ್ಮನಿಯಿಂದ ಭಾರತಕ್ಕೆ? ಎಸ್‌ಐಟಿ ಅಲರ್ಟ್‌

Dina Bhavishya
ಭವಿಷ್ಯ1 day ago

Dina Bhavishya : ಭೂ ವ್ಯವಹಾರಕ್ಕೆ ಇದು ಸೂಕ್ತ ಸಮಯ; ವ್ಯಾಪಾರದಲ್ಲಿ ಡಬಲ್‌ ಲಾಭ

HD Revanna Released first reaction after release will be acquitted of all charges
ರಾಜಕೀಯ2 days ago

HD Revanna Released: ರಿಲೀಸ್‌ ಬಳಿಕ ರೇವಣ್ಣ ಫಸ್ಟ್‌ ರಿಯಾಕ್ಷನ್;‌ ನ್ಯಾಯಾಂಗದ ಮೇಲೆ ನಂಬಿಕೆ ಇದೆ; ಆರೋಪ ಮುಕ್ತನಾಗುವೆ

CM Siddaramaiah says Our government is stable for 5 years BJP will disintegrate
Lok Sabha Election 20242 days ago

CM Siddaramaiah: ನಮ್ಮ ಸರ್ಕಾರ 5 ವರ್ಷ ಸುಭದ್ರ; ಚುನಾವಣೆ ಬಳಿಕ ಬಿಜೆಪಿ ಛಿದ್ರ ಎಂದ ಸಿಎಂ ಸಿದ್ದರಾಮಯ್ಯ!

I dont want to go to other states for Lok Sabha Election 2024 campaign for Congress says CM Siddaramaiah
Lok Sabha Election 20242 days ago

CM Siddaramaiah: ಕಾಂಗ್ರೆಸ್‌ ಪರ ಬೇರೆ ರಾಜ್ಯಗಳಿಗೆ ಪ್ರಚಾರಕ್ಕೆ ಹೋಗಲು ನನಗೆ ಇಷ್ಟವಿಲ್ಲ: ಸಿಎಂ ಸಿದ್ದರಾಮಯ್ಯ!

HD Revanna Bail I am not happy that Revanna has been released says HD Kumaraswamy
ರಾಜಕೀಯ2 days ago

HD Revanna Bail: ರೇವಣ್ಣ ಬಿಡುಗಡೆಯಾಗಿದ್ದಕ್ಕೆ ನಾನಂತೂ ಖುಷಿ ಪಡಲ್ಲ ಎಂದ ಎಚ್‌ಡಿಕೆ!

karnataka Rain Effected
ಬೆಂಗಳೂರು2 days ago

Karnataka Rain: ಮಿಡ್‌ನೈಟ್‌ ಮಳೆ ಅವಾಂತರ; ಮರಗಳು, ವಿದ್ಯುತ್‌ ಕಂಬಗಳು ಧರೆಗೆ, ಕುಸಿದು ಬಿದ್ದ ಮನೆ

Dina Bhavishya
ಭವಿಷ್ಯ2 days ago

Dina Bhavishya : ಉದ್ಯೋಗದ ಸ್ಥಳದಲ್ಲಿ ನಿಮ್ಮ ವಿರುದ್ಧ ಪಿತೂರಿ ಮಾಡ್ಬಹುದು ಎಚ್ಚರ!

HD Revanna Bail Revanna will not leave the country condition imposed by the court
ಕ್ರೈಂ3 days ago

HD Revanna Bail: ರೇವಣ್ಣ ದೇಶ ಬಿಡಂಗಿಲ್ಲ, ಕೆ.ಆರ್‌. ನಗರಕ್ಕೆ ಎಂಟ್ರಿ ಕೊಡಂಗಿಲ್ಲ! ಕೋರ್ಟ್‌ ವಿಧಿಸಿದ ಷರತ್ತು ಏನು?

HD Revanna Bail
ಕ್ರೈಂ3 days ago

HD Revanna Bail: ಎಚ್‌.ಡಿ ರೇವಣ್ಣಗೆ ಕೊನೆಗೂ ಜಾಮೀನು; ಎಸ್‌ಐಟಿಗೆ ಮುಖಭಂಗ!

ಟ್ರೆಂಡಿಂಗ್‌