ವಿಸ್ತಾರ ಸಂಪಾದಕೀಯ: ಚಾಂಪಿಯನ್​ ಆರ್​​ಸಿಬಿ ಮಹಿಳೆಯರು ಯುವ ಅಥ್ಲೀಟ್​​ಗಳಿಗೆ ಪ್ರೇರಣೆ - Vistara News

ಪ್ರಮುಖ ಸುದ್ದಿ

ವಿಸ್ತಾರ ಸಂಪಾದಕೀಯ: ಚಾಂಪಿಯನ್​ ಆರ್​​ಸಿಬಿ ಮಹಿಳೆಯರು ಯುವ ಅಥ್ಲೀಟ್​​ಗಳಿಗೆ ಪ್ರೇರಣೆ

WPL 2024 : ಆರ್​ಸಿಬಿ ಫ್ರಾಂಚೈಸಿ 16 ವರ್ಷ ಒಂದೇ ಒಂದು ಪ್ರಶಸ್ತಿ ಗೆದ್ದಿಲ್ಲ. ಸ್ಮೃತಿ ಮಂಧಾನಾ ನೇತೃತ್ವದ ಬಳಗ ನಮ್ಮಿಂದ ಟ್ರೋಫಿ ಗೆಲ್ಲುವುದಕ್ಕೆ ಸಾಧ್ಯ ಎಂಬುದನ್ನು ತೋರಿಸಿ ಕೊಟ್ಟಿದೆ.

VISTARANEWS.COM


on

RCB Team
ಮಹತ್ವದ, ಕುತೂಹಲಕರ ಸುದ್ದಿಗಾಗಿ ಫಾಲೊ ಮಾಡಿ
Koo

ಸ್ಮೃತಿ ಮಂಧಾನಾ ನೇತೃತ್ವದ ರಾಯಲ್​ ಚಾಲೆಂಜರ್ಸ್ ಬೆಂಗಳೂರು (RCB) ತಂಡ ಎರಡನೇ ಆವೃತ್ತಿಯ ಡಬ್ಲ್ಯುಪಿಎಲ್​​​ನಲ್ಲಿ (WPL 2024) ವಿಕ್ರಮಗೈದಿದೆ. ಪ್ರಶಸ್ತಿ ಫೈಟ್​ನಲ್ಲಿ ಡೆಲ್ಲಿ ಕ್ಯಾಪಿಟಲ್ಸ್ (Delhi Capitals) ವಿರುದ್ಧ 8 ವಿಕೆಟ್​ಗಳ ಅಧಿಕಾರಯುತ ಗೆಲುವು ಸಾಧಿಸಿ ಟ್ರೋಫಿ ತನ್ನದಾಗಿಸಿಕೊಂಡಿದೆ. ಅಲ್ಲಿಗೆ ಬೆಂಗಳೂರು ಮೂಲದ ಆರ್​ಸಿಬಿ ಫ್ರಾಂಚೈಸಿಯ 17 ವರ್ಷಗಳ ಪ್ರಶಸ್ತಿಯ ಕೊರಗು ಅಂತ್ಯಗೊಂಡಿತು. ಪುರುಷರ ತಂಡ 16 ವರ್ಷಗಳು ಆಡಿ ಗೆಲ್ಲಲಾಗದ ದೊಡ್ಡ ಪ್ರಶಸ್ತಿಯನ್ನು ಮಹಿಳೆಯರ ಬಳಗ ತನ್ನದಾಗಿಸಿಕೊಂಡಿದೆ. ಕನ್ನಡಿಗರ ಹಾಗೂ ವಿಶ್ವಾದ್ಯಂತ ಇರುವ ಆರ್​ಸಿಬಿ ಅಭಿಮಾನಿಗಳ ಸಂಭ್ರಮಕ್ಕೆ ಇನ್ನೇನು ಬೇಕು? “ಈ ಸಲ ಕಪ್​ ನಮ್ಮದೇ’ ಎಂದು ಹೇಳಿ ಹೇಳಿ ಸುಸ್ತಾಗಿದ್ದ ಅವರೆಲ್ಲರಿಗೂ ಬೂಸ್ಟರ್ ಡೋಸ್ ಕೊಟ್ಟಂತಾಗಿದೆ. ಸೋಶಿಯಲ್ ಮೀಡಿಯಾಗಳೆಲ್ಲವೂ ಆರ್​ಸಿಬಿಯ ವನಿತೆಯರಿಗೆ ಸಲ್ಲಿಕೆಯಾದ ಪ್ರೀತಿ, ಅಭಿಮಾನಗಳಿಂದ ತುಂಬಿದೆ.

ಫೈನಲ್​ನಲ್ಲಿ ಟಾಸ್ ಗೆದ್ದ ಡೆಲ್ಲಿ ಕ್ಯಾಪಿಟಲ್ಸ್​ ತಂಡ ಮೊದಲು ಬ್ಯಾಟ್​ ಮಾಡಿ ಬೃಹತ್​ ಮೊತ್ತ ಪೇರಿಸುವ ಗುರಿ ಹೊಂದಿತ್ತು. ಆದರೆ, ಆರ್​ಸಿಬಿ ತಂಡ ತನ್ನ ಪ್ರಖರ ಬೌಲಿಂಗ್ ಅಸ್ತ್ರಗಳ ಮೂಲಕ 113 ರನ್​ಗಳಿಗೆ ಆ ತಂಡವನ್ನು ಕಟ್ಟಿಹಾಕಿತು. ಸಾಧಾರಣ ಗುರಿ ಬೆನ್ನಟ್ಟಲು ಹೊರಟ ಆರ್​​ಸಿಬಿ ಬ್ಯಾಟರ್​ಗಳು ವಿಶ್ವಾಸದಿಂದಲೇ ಆಡಿದರು. ಡೆಲ್ಲಿಯ ನಿಧಾನಗತಿಯ ಪಿಚ್​ನಲ್ಲಿ ದೊಡ್ಡ ಹೊಡೆತಗಳನ್ನು ಬಾರಿಸಿ ಗೆಲ್ಲುವುದು ಅಸಾಧ್ಯ ಎಂದು ಅರಿತು ನಿಧಾನವಾಗಿ ರನ್ ಗಳಿಸಿ ಗೆಲ್ಲುವ ಯೋಜನೆ ಕಾರ್ಯಗತಗೊಳಿಸಿದರು. ಅವರ ಲೆಕ್ಕಾಚಾರ ಸಫಲಗೊಂಡಿತು. 19.3 ಓವರ್​ಗಳಲ್ಲಿ ಕೇವಲ 2 ವಿಕೆಟ್​​ ನಷ್ಟಕ್ಕೆ ಪಂದ್ಯವನ್ನು ವಶಪಡಿಸಿಕೊಂಡಿತು. ಆರ್​ಸಿಬಿ ತಂಡದ ಸದಸ್ಯರೆಲ್ಲರ ಸಂಭ್ರಮಕ್ಕೆ ಪಾರವೇ ಇರಲಿಲ್ಲ. ಮೈದಾನಕ್ಕೆ ನುಗ್ಗಿ ಕುಣಿದು ಕುಪ್ಪಳಿಸಿದರು.

ಮಹಿಳೆಯ ಪ್ರೀಮಿಯರ್ ಲೀಗ್​ ಆರಂಭಗೊಂಡಿದ್ದು 2023ರಲ್ಲಿ. ಮೊದಲ ಆವೃತ್ತಿಯಲ್ಲಿ ಬಹುತೇಕ ಇದೇ ಆಟಗಾರ್ತಿಯನ್ನು ಹೊಂದಿದ್ದ ತಂಡಕ್ಕೆ ನಿರಾಸೆಯೇ ಎದುರಾಗಿತ್ತು. ಪ್ಲೇಆಫ್ ಹಂತಕ್ಕೇರಲೂ ಸಾಧ್ಯವಾಗಿರಲಿಲ್ಲ. ಆದರೆ ಎರಡನೇ ಆವೃತ್ತಿಯ ಲೀಗ್​ನಲ್ಲಿಯೇ ಫೀನಿಕ್ಸ್​ನಂತೆ ಚೇತರಿಸಿಕೊಂಡು ಟ್ರೋಫಿ ಗೆದ್ದಿದೆ. ಇದರೊಂದಿಗೆ ಪುರುಷರಿಗೆ ಆಗದ್ದನ್ನು ಮಹಿಳೆ ಸಾಧಿಸಿ ತೋರಿಸಬಲ್ಲಳು ಎಂಬ ಮಾತಿಗೆ ಸಾಕ್ಷಿ ಒದಗಿಸಿದೆ.

ಹಾಲಿ ಟೂರ್ನಿಯಲ್ಲಿ ಅರ್​​ಸಿಬಿ ಆರಂಭ ಉತ್ತಮವಾಗಿತ್ತು. ಮೊದಲ ಎರಡು ಪಂದ್ಯಗಳಲ್ಲಿ ಸತತವಾಗಿ ಗೆಲ್ಲುವ ಮೂಲಕ ವಿಶ್ವಾಸ ಮೂಡಿಸಿಕೊಂಡಿತ್ತು. ಆದರೆ, ನಂತರ ಸೋಲಿನ ಸುಳಿಗೆ ನಿಧಾನವಾಗಿ ಸಿಲುಕಲು ತೊಡಗಿತು. ನಂತರ ಎರಡು ಪಂದ್ಯಗಳಲ್ಲಿ ಸೋಲು ಕಂಡಿತು. ಆ ಬಳಿಕ ಒಂದು ಪಂದ್ಯದಲ್ಲಿ ಗೆದ್ದರೂ ಮುಂದಿನ ಎರಡು ಹಣಾಹಣಿಗಳಲ್ಲಿ ಸೋಲು ಎದುರಾಯಿತು. ಹೀಗಾಗಿ ಪ್ಲೇಆಫ್ ಪ್ರವೇಶ ಕಷ್ಟವಾಯಿತು. ಆದರೆ, ಪ್ಲೇಆಫ್​ಗೇರಲು ಗೆಲ್ಲಲೇಬೇಕಾದ ಪಂದ್ಯದಲ್ಲಿ ಕಳೆದ ಬಾರಿಯ ಚಾಂಪಿಯನ್​ ಮುಂಬಯಿ ತಂಡವನ್ನು ಬಗ್ಗುಬಡಿಯಿತು. ಅಲ್ಲಿಗೆ ಆರ್​ಸಿಬಿ ವಿಶ್ವಾಸ ಹೆಚ್ಚಾಯಿತು. ಪ್ಲೇ ಆಫ್​ ಪಂದ್ಯದಲ್ಲಿ ಮತ್ತೊಮ್ಮೆ ಎದುರಾದ ಮುಂಬಯಿ ತಂಡಕ್ಕೆ ಮನೆ ದಾರಿ ತೋರಿಸಿ ಫೈನಲ್ ಗೆ ಪ್ರವೇಶ ಪಡೆಯಿತು. ಫೈನಲ್​ನಲ್ಲಿ ಕಪ್​ ನಮ್ಮದಾಯಿತು. ಸೋಲುಗಳ ನಡುವೆಯೂ ಕೊನೇ ಮೂರು ಪಂದ್ಯಗಳನ್ನು ಸತತವಾಗಿ ಗೆಲ್ಲುವ ಮೂಲಕ ಟ್ರೋಫಿಗೆ ಮುತ್ತಿಟ್ಟಿದ್ದಾರೆ ಆರ್​ಸಿಬಿ ವನಿತಯರು. ಈ ತಂಡದ ಸಂಘಟಿತ ಹೋರಾಟ ಯುವ ಅಥ್ಲೀಟ್​ಗಳ ಪಾಲಿಗೆ ನಿಜವಾದ ಪ್ರೇರಣೆ. ಹಲವಾರು ವರ್ಷಗಳಿಂದ ಕಪ್​ ಗೆಲ್ಲದ ಫ್ರಾಂಚೈಸಿ ಎಂಬ ಹೀಗಳಿಕೆಯ ನಡುವೆಯೂ ಗೆಲುವಿನ ಪಥದಲ್ಲಿ ಸಾಗಿ ಟ್ರೋಫಿ ಗೆಲ್ಲುವುದು ಸುಲಭದ ಮಾತಲ್ಲ. ಅದಕ್ಕೆ ಮಾನಸಿಕ ಸ್ಥಿರತೆ ಬಲಿಷ್ಠವಾಗಿರಬೇಕಾಗುತ್ತದೆ. ಅದನ್ನು ಆರ್​​​ಸಿಬಿ ವನಿತೆಯರು ಸಾಬೀತುಪಡಿಸಿದ್ದಾರೆ.

ತನಗಿಂತ ಬಲಿಷ್ಠ ತಂಡಗಳು ಹಾಗೂ ಚಾಂಪಿಯನ್ ತಂಡವನನ್ನು ಎದುರಿಸುವಾಗ ಯಾವುದೇ ಹಿಂಜರಿಕೆ ತೋರದೆ ನಮ್ಮ ನೈಜ ಆಟಕ್ಕೆ ಇಂಬು ಕೊಟ್ಟ ಆರ್​ಸಿಬಿ ಆಟಗಾರ್ತಿಯರು ಚಾಂಪಿಯನ್ ಪಟ್ಟಕ್ಕೆ ಅರ್ಹರು. ಆರ್​​ಸಿಬಿ ಹೋರಾಟ ಟೂರ್ನಿ ಆರಂಭದಿಂದ ಕೊನೆಯವರೆಗೂ ಪುರುಷರ ತಂಡ ಸೇರಿದಂತೆ ಕ್ರಿಕೆಟ್ ಕ್ಷೇತ್ರದ ಎಲ್ಲ ತಂಡಗಳಿಗೆ ಆದರ್ಶ.

ಆರ್​ಸಿಬಿ ಪರ ಬ್ಯಾಟಿಂಗ್​ನಲ್ಲಿ 11 ಇನಿಂಗ್ಸ್​​​​ಗಳಲ್ಲಿ 395 ಬಾರಿಸಿದ ಎಲಿಸ್ ಪೆರಿ, 12 ಇನಿಂಗ್ಸ್​ಗಳಲ್ಲಿ 361 ರನ್ ಬಾರಿಸಿದ ನಾಯಕಿ ಸ್ಮೃತಿ ಮಂಧಾನಾ, 10 ಇನಿಂಗ್ಸ್​ಗಳಲ್ಲಿ 286 ರನ್ ಚಚ್ಚಿದ ವಿಕೆಟ್​ಕೀಪರ್ ಬ್ಯಾಟರ್​ ರಿಚಾ ಘೋಷ್​ ಆರ್​ಸಿಬಿ ಅಭಿಮಾನಿಗಳ ಅಕ್ಕರೆಗೆ ಪಾತ್ರರಾಗಿದ್ದಾರೆ. ಕನ್ನಡ ನಾಡಿನ ಕುವರಿ ಶ್ರೇಯಾಂಕ ಪಾಟೀಲ್ 10 ಇನಿಂಗ್ಸ್​ಗಳಲ್ಲಿ 16 ವಿಕೆಟ್​, ಆಶಾ ಶೋಭನಾ 12 ವಿಕೆಟ್ ಪಡೆದು ಶಹಬ್ಬಾಸ್​ಗಿರಿ ಪಡೆದುಕೊಂಡಿದ್ದಾರೆ. ಈ ಪ್ರತಿಭೆಗಳು ಭವಿಷ್ಯದ ಕ್ರಿಕೆಟರ್​ಗಳಿಗೆ ಮಾದರಿಯಾಗುವುದರಲ್ಲಿ ಸಂಶಯವೇ ಇಲ್ಲ. ಆರ್​​ಸಿಬಿ ಮಹಿಳಾ ಕಲಿಗಳ ಬ್ಯಾಟಿಂಗ್, ಬೌಲಿಂಗ್ ಹಾಗೂ ಫೀಲ್ಡಿಂಗ್ ಪ್ರಯತ್ನಗಳು ಆರ್​ಸಿಬಿಯ ಸಾಧನೆಯ ಇತಿಹಾಸದಲ್ಲಿ ದಾಖಲಾಗಿದೆ.

ಕ್ಷಣ ಕ್ಷಣದ ಮಾಹಿತಿಗಾಗಿ Vistara News FaceBook ಪೇಜ್ ಫಾಲೋ ಮಾಡಿ
ಮಹತ್ವದ ಮಾಹಿತಿಗಾಗಿ ವಿಸ್ತಾರ ನ್ಯೂಸ್ ಆ್ಯಪ್ ಉಚಿತವಾಗಿ ಡೌನ್ ಲೋಡ್ ಮಾಡಿಕೊಳ್ಳಿ: Andriod App | IOS App
Continue Reading
Click to comment

Leave a Reply

Your email address will not be published. Required fields are marked *

ಕ್ರೀಡೆ

KKR vs SRH Qualifier 1: ಕೆಕೆಆರ್​-ಹೈದರಾಬಾದ್​ ಮುಖಾಮುಖಿ ದಾಖಲೆ, ಪಿಚ್​ ರಿಪೋರ್ಟ್​ ಹೇಗಿದೆ?

KKR vs SRH Qualifier 1: ಇತ್ತಂಡಗಳ ನಡುವಿನ ಪಂದ್ಯದಲ್ಲಿ ಯಾರೇ ಸೋತರೂ ಕೂಡ ಅವರಿಗೆ ಮತ್ತೊಂದು ಕ್ವಾಲಿಫೈಯರ್​ ಪಂದ್ಯವನ್ನಾಡುವ ಅವಕಾಶವಿದೆ. ಎಲಿಮಿನೇಟರ್​ ಪಂದ್ಯದ ವಿಜೇತರನ್ನು ಎದುರಿಸಲಿದೆ. ಹೀಗಾಗಿ ಸೋತರೂ ಮತ್ತೊಂದು ಪಂದ್ಯ ಆಡಿ ಅಲ್ಲಿ ಗೆದ್ದರೆ ಫೈನಲ್​ ಪ್ರವೇಶಿಸಬಹುದು.

VISTARANEWS.COM


on

KKR vs SRH Qualifier 1
Koo

ಅಹಮದಾಬಾದ್​: ಈ ಬಾರಿಯ ಐಪಿಎಲ್​ನ(IPL 2024) ಬಲಿಷ್ಠ ತಂಡಗಳಾದ ಕೆಕೆಆರ್​ ಮತ್ತು ಸನ್​ರೈಸರ್ಸ್​ ಹೈದರಾಬಾದ್​ ನಡುವಣ ಮೊದಲ ಕ್ವಾಲಿಫೈಯರ್(KKR vs SRH Qualifier 1) ಪಂದ್ಯಕ್ಕೆ ಕ್ಷಣಗಣನೆ ಆರಂಭವಾಗಿದೆ. ನಾಳೆ ನಡೆಯುವ ಇತ್ತಂಡಗಳ ಈ ಕಾದಾಟಕ್ಕೆ ಅಹಮದಾಬಾದ್​ನ ನರೇಂದ್ರ ಮೋದಿ ಕ್ರಿಕೆಟ್​ ಸ್ಟೇಡಿಯಂ(Narendra Modi Stadium) ಅಣಿಯಾಗಿದೆ. ಯಾರೇ ಗೆದ್ದರೂ ನೇರವಾಗಿ ಫೈನಲ್​ಗೆ ಎಂಟ್ರಿಕೊಡಲಿದ್ದಾರೆ. ಈ ತಂಡ ಯಾವುದು ಎಂಬುದು ನಾಳಿನ ಪಂದ್ಯದ ಕೌತುಕ.

ಬಲಾಬಲ ​


ಉಭಯ ತಂಡಗಳ ಐಪಿಎಲ್​ ಇತಿಹಾಸ ನೋಡುವಾಗ ಕೆಕೆಆರ್​ ಬಲಿಷ್ಠವಾಗಿದೆ. ಇದುವರೆಗೆ 26 ಪಂದ್ಯಗಳನ್ನು ಆಡಿ 17 ಪಂದ್ಯಗಳಲ್ಲಿ ಕೆಕೆಆರ್​ ಗೆಲುವು ಸಾಧಿಸಿದೆ. ಹೈದರಾಬಾದ್​ ಕೇವಲ 9 ಪಂದ್ಯ ಮಾತ್ರ ಗೆದ್ದಿದೆ. ಈ ಆವೃತ್ತಿಯಲ್ಲಿಯೂ ಆಡಿದ ಪಂದ್ಯದಲ್ಲೂ ಹೈದರಾಬಾದ್​ ಸೋಲು ಕಂಡಿತ್ತು. ಉಭಯ ತಂಡಗಳ ನಡುವೆ ಒಂದು ಸೂಪರ್​ ಓವರ್​ ಪಂದ್ಯ ಕೂಡ ನಡೆದಿತ್ತು. 2020ರಲ್ಲಿ ಅಬುಧಾಬಿಯಲ್ಲಿ ನಡೆದಿದ್ದ ಪಂದ್ಯ ಇದಾಗಿತ್ತು. ಈ ಪಂದ್ಯದಲ್ಲಿ ಕೆಕೆಆರ್​ ಜಯಿಸಿತ್ತು. ಈ ಲೆಕ್ಕಾಚಾರವನ್ನು ನೋಡುವಾಗ ನಾಳಿನ ಪಂದ್ಯದಲ್ಲಿಯೂ ಕೆಕೆಆರ್​ ಗೆಲುವಿನ ಫೇವರಿಟ್​ ಆಗಿದೆ.

ಸೋತರೆ ಮತ್ತೊಂದು ಅವಕಾಶ


ಇತ್ತಂಡಗಳ ನಡುವಿನ ಪಂದ್ಯದಲ್ಲಿ ಯಾರೇ ಸೋತರೂ ಕೂಡ ಅವರಿಗೆ ಮತ್ತೊಂದು ಕ್ವಾಲಿಫೈಯರ್​ ಪಂದ್ಯವನ್ನಾಡುವ ಅವಕಾಶವಿದೆ. ಎಲಿಮಿನೇಟರ್​ ಪಂದ್ಯದ ವಿಜೇತರನ್ನು ಎದುರಿಸಲಿದೆ. ಹೀಗಾಗಿ ಸೋತರೂ ಮತ್ತೊಂದು ಪಂದ್ಯ ಆಡಿ ಅಲ್ಲಿ ಗೆದ್ದರೆ ಫೈನಲ್​ ಪ್ರವೇಶಿಸಬಹುದು. ನಾಳಿನ ಪಂದ್ಯದಲ್ಲಿ ಗೆದ್ದ ತಂಡ ನೇರವಾಗಿ ಫೈನಲ್​ ಟಿಕೆಟ್​ ಪಡೆಯಲಿದೆ.

ಇದನ್ನೂ ಓದಿ IPL 2024: ಪ್ಲೇ ಆಫ್ ಪಂದ್ಯಗಳಿಗೆ ಮೀಸಲು ದಿನ ಇದೆಯೇ? ಮಳೆ ಬಂದರೆ ಫಲಿತಾಂಶ ನಿರ್ಧಾರ ಹೇಗೆ?

ಮಳೆ ಭೀತಿ


ಅಹಮದಾಬಾದ್​ನಲ್ಲಿ ಮಳೆಯಿಂದ ಒಂದು ಲೀಗ್​ ಪಂದ್ಯ ರದ್ದಾಗಿತ್ತು. ಇದು ಕೆಕೆಆರ್​ ಮತ್ತು ಗುಜರಾತ್​ ನಡುವಣ ಪಂದ್ಯವಾಗಿತ್ತು. ಮಳೆಯಿಂದ ಟಾಸ್​ ಕೂಡ ಆಗದೆ ರದ್ದಾಗಿತ್ತು. ಇದೀಗ ನಾಳೆ ನಡೆಯುವ ಕ್ವಾಲಿಫೈಯರ್​ ಪಂದ್ಯಕ್ಕೂ ಮಳೆಯ ಭೀತಿ ಇದೆ. ಒಂದೊಮ್ಮೆ ಮಳೆ ಬಂದರೂ ಕೂಡ ಚಿಂತಿಸುವ ಅಗತ್ಯವಿಲ್ಲ. ಮೀಸಲು ದಿನ ಇದೆ.

ಪಿಚ್​ ರಿಪೋರ್ಟ್​


ವಿಶ್ವದ ಅತಿ ದೊಡ್ಡ ಕ್ರೀಡಾಂಗಣ, ಅಹಮದಾಬಾದ್‌ನ ನರೇಂದ್ರ ಮೋದಿ ಸ್ಟೇಡಿಯಂ ನೇರ ಬೌಂಡರಿಗಳಿಗೆ ಸರಾಸರಿ 75 ಮೀಟರ್ ಮತ್ತು ಚದರ ಗಡಿಗಳಿಗೆ 60 ಮೀಟರ್ ಉದ್ದವನ್ನು ಹೊಂದಿದೆ. ಇಲ್ಲಿ ಇದುವರೆಗೆ 33 ಐಪಿಎಲ್​ ಪಂದ್ಯಗಳು ನಡೆದಿದ್ದು 15 ಬಾರಿ ಮೊದಲು ಬ್ಯಾಟಿಂಗ್​ ಮಾಡಿದ ತಂಡ, 18 ಬಾರಿ ಚೇಸಿಂಗ್​ ನಡೆಸಿದ ತಂಡಗಳು ಗೆದ್ದಿವೆ. ಇಲ್ಲಿ ದಾಖಲಾದ ಗರಿಷ್ಠ ಒತ್ತ 233 ರನ್​. ಮುಂಬೈ ಮತ್ತು ಗುಜರಾತ್ ನಡುವಣ ಪಂದ್ಯದಲ್ಲಿ ಈ ಮೊತ್ತ ದಾಖಲಾಗಿತ್ತು.

ಸಂಭಾವ್ಯ ತಂಡಗಳು


ಸನ್​ರೈಸರ್ಸ್​ ಹೈದರಾಬಾದ್​: ಟ್ರಾವಿಸ್ ಹೆಡ್, ನಿತೀಶ್ ರೆಡ್ಡಿ, ಹೆನ್ರಿಚ್ ಕ್ಲಾಸೆನ್ (ವಿಕೆಟ್​ ಕೀಪರ್​), ಅಬ್ದುಲ್ ಸಮದ್, ಶಹಬಾಜ್ ಅಹ್ಮದ್, ಸನ್ವಿರ್ ಸಿಂಗ್, ಪ್ಯಾಟ್ ಕಮ್ಮಿನ್ಸ್ (ನಾಯಕ), ಭುವನೇಶ್ವರ್ ಕುಮಾರ್, ಜಯದೇವ್ ಉನದ್ಕತ್, ವಿಜಯಕಾಂತ್ ವ್ಯಾಸಕಾಂತ್, ಟಿ. ನಟರಾಜನ್.

ಕೆಕೆಆರ್​: ರಹಮಾನುಲ್ಲಾ ಗುರ್ಬಾಜ್, ಸುನಿಲ್ ನರೈನ್, ವೆಂಕಟೇಶ್ ಅಯ್ಯರ್, ಶ್ರೇಯಸ್ ಅಯ್ಯರ್ (ನಾಯಕ), ರಿಂಕು ಸಿಂಗ್, ನಿತೀಶ್ ರಾಣಾ, ಆಂಡ್ರೆ ರಸೆಲ್, ರಮಣ್​ದೀಪ್ ಸಿಂಗ್, ಮಿಚೆಲ್ ಸ್ಟಾರ್ಕ್, ಹರ್ಷಿತ್ ರಾಣಾ, ವರುಣ್ ಚಕ್ರವರ್ತಿ.

Continue Reading

ಪ್ರಮುಖ ಸುದ್ದಿ

Road Accident: ಪಿಕ್‌ಅಪ್‌ ವಾಹನ ಕಂದಕಕ್ಕೆ ಬಿದ್ದು 18 ಕಾರ್ಮಿಕರ ದುರ್ಮರಣ; ಕೆಲಸಕ್ಕೆ ಹೊರಟವರು ಮಸಣಕ್ಕೆ!

Road Accident: ಅಪಘಾತ ಸಂಭವಿಸಿ 18 ಜನ ಮೃತಪಟ್ಟ ಹಿನ್ನೆಲೆಯಲ್ಲಿ ಉಪ ಮುಖ್ಯಮಂತ್ರಿ ವಿಜಯ್‌ ಶರ್ಮಾ ಸಂತಾಪ ಸೂಚಿಸಿದ್ದಾರೆ. ಕವಾರ್ಧ ಜಿಲ್ಲೆಯಲ್ಲಿ ಪಿಕ್‌ಅಪ್‌ ವಾಹನ ಕಂದಕಕ್ಕೆ ಉರುಳಿ 15 ಜನ ಮೃತಪಟ್ಟಿರುವ ಸುದ್ದಿ ತಿಳಿದು ಅತೀವ ನೋವಾಯಿತು. ಕುಟುಂಬಸ್ಥರ ನೋವಿನಲ್ಲಿ ನಾನು ಕೂಡ ಭಾಗಿಯಾಗಿದ್ದೇನೆ ಎಂದು ಎಕ್ಸ್‌ ಸಾಮಾಜಿಕ ಜಾಲತಾಣದಲ್ಲಿ ಅವರು ಪೋಸ್ಟ್‌ ಮಾಡಿದ್ದಾರೆ.

VISTARANEWS.COM


on

Road Accident
Koo

ರಾಯ್‌ಪುರ: ಛತ್ತೀಸ್‌ಗಢದ ಕವಾರ್ಧ ಜಿಲ್ಲೆಯಲ್ಲಿ ಭೀಕರ ಅಪಘಾತ (Road Accident) ಸಂಭವಿಸಿದ್ದು, 18 ಕಾರ್ಮಿಕರು ಮೃತಪಟ್ಟಿದ್ದಾರೆ. ಛತ್ತೀಸ್‌ಗಢದ (Chhattisgarh) ಕವಾರ್ಧ (Kawardha) ಪ್ರದೇಶದಲ್ಲಿ ಸುಮಾರು 25-30 ಕಾರ್ಮಿಕರಿದ್ದ ಪಿಕ್‌ಅಪ್‌ ವಾಹನವು ತೆರಳುತ್ತಿತ್ತು. ಇದೇ ವೇಳೆ ಚಾಲಕನ ನಿಯಂತ್ರಣ ತಪ್ಪಿ ಬಾಹ್‌ಪನಿ ಪ್ರದೇಶದ ಕಂದಕಕ್ಕೆ ಉರುಳಿದೆ. 8 ಜನರು ಗಂಭೀರವಾಗಿ ಗಾಯಗೊಂಡಿದ್ದು, ಅವರನ್ನು ಆಸ್ಪತ್ರೆಗೆ ದಾಖಲಿಸಲಾಗಿದೆ ಎಂದು ತಿಳಿದುಬಂದಿದೆ. ಸೋಮವಾರ (ಮೇ 20) ಬೆಳಗಿನ ಜಾವವೇ ಅಪಘಾತ ಸಂಭವಿಸಿದೆ ಎನ್ನಲಾಗಿದೆ.

ಬೈಗಾ ಬುಡಕಟ್ಟು ಸಮುದಾಯದವರು ಕೆಲಸಕ್ಕೆಂದು ಪಿಕ್‌ಅಪ್‌ ವಾಹನದಲ್ಲಿ ತೆರಳುತ್ತಿದ್ದರು. ಸುಮಾರು 20 ಅಡಿ ಆಳದ ಕಂದಕಕ್ಕೆ ಬಸ್‌ ಉರುಳಿದ ಕಾರಣ ಸಾವಿನ ಸಂಖ್ಯೆ ಹೆಚ್ಚಾಗಿದೆ ಎಂದು ಪೊಲೀಸರು ತಿಳಿಸಿದ್ದಾರೆ. ಅಪಘಾತ ಸಂಭವಿಸುತ್ತಲೇ ಆಂಬುಲೆನ್ಸ್‌ ವ್ಯವಸ್ಥೆ ಮಾಡಲಾಯಿತಾದರೂ ವಾಹನ ಬಿದ್ದ ತೀವ್ರತೆಗೆ ಗಂಭೀರವಾಗಿ ಗಾಯಗೊಂಡಿದ್ದ ಕಾರ್ಮಿಕರು ಮೃತಪಟ್ಟಿದ್ದಾರೆ. ಮೃತರಲ್ಲಿ ಮಹಿಳೆಯರು ಕೂಡ ಇದ್ದಾರೆ ಎಂದು ಪೊಲೀಸ್‌ ಮೂಲಗಳು ಮಾಹಿತಿ ನೀಡಿವೆ. ಇವರು ಕುಯಿ ಗ್ರಾಮದವರು ಎಂಬ ಮಾಹಿತಿಯೂ ಲಭ್ಯವಾಗಿದೆ.

ಸಂತಾಪ ಸೂಚಿಸಿದ ಡಿಸಿಎಂ

ಅಪಘಾತ ಸಂಭವಿಸಿ 18 ಜನ ಮೃತಪಟ್ಟ ಹಿನ್ನೆಲೆಯಲ್ಲಿ ಉಪ ಮುಖ್ಯಮಂತ್ರಿ ವಿಜಯ್‌ ಶರ್ಮಾ ಸಂತಾಪ ಸೂಚಿಸಿದ್ದಾರೆ. “ಕವಾರ್ಧ ಜಿಲ್ಲೆಯಲ್ಲಿ ಪಿಕ್‌ಅಪ್‌ ವಾಹನ ಕಂದಕಕ್ಕೆ ಉರುಳಿ 15 ಜನ ಮೃತಪಟ್ಟಿರುವ ಸುದ್ದಿ ತಿಳಿದು ಅತೀವ ನೋವಾಯಿತು. ಕುಟುಂಬಸ್ಥರ ನೋವಿನಲ್ಲಿ ನಾನು ಕೂಡ ಭಾಗಿಯಾಗಿದ್ದೇನೆ. ಗಾಯಾಳುಗಳು ಶೀಘ್ರದಲ್ಲೇ ಗುಣಮುಖರಾಗಲಿ ಎಂಬುದಾಗಿ ಪ್ರಾರ್ಥಿಸುತ್ತೇನೆ. ಸಂತ್ರಸ್ತರು ಹಾಗೂ ಅವರ ಕುಟುಂಬಸ್ಥರಿಗೆ ಅಗತ್ಯ ನೆರವು ಒದಗಿಸುವಂತೆ ಅಧಿಕಾರಿಗಳಿಗೆ ಸೂಚಿಸಲಾಗಿದೆ” ಎಂದು ಡಿಸಿಎಂ ತಿಳಿಸಿದ್ದಾರೆ.

ಒಂದು ತಿಂಗಳ ಹಿಂದಷ್ಟೇ ಛತ್ತೀಸ್‌ಗಢದ ದುರ್ಗ್ ಜಿಲ್ಲೆಯ ಕುಮ್ಹಾರಿ ಪ್ರದೇಶದಲ್ಲಿ ಬಸ್ಸೊಂದು ಕಂದಕಕ್ಕೆ ಉರುಳಿ ಬಿದ್ದ ಪರಿಣಾಮ ಖಾಸಗಿ ಸಂಸ್ಥೆಯೊಂದರ 12 ಕಾರ್ಮಿಕರು ಮೃತಪಟ್ಟು, 14 ಮಂದಿ ಗಾಯಗೊಂಡಿದ್ದರು. ದುರ್ಗದ ಗಣಿಯಲ್ಲಿ ಕಾರ್ಮಿಕರಿಂದ ತುಂಬಿದ್ದ ಬಸ್ ಪಲ್ಟಿಯಾಗಿತ್ತು. ಗಾಯಗೊಂಡವರಲ್ಲಿ ಹನ್ನೆರಡು ಜನರನ್ನು ಎಐಐಎಂಎಸ್ (ರಾಯಪುರ) ಗೆ ಸ್ಥಳಾಂತರಿಸಲಾಗಿತ್ತು, ಉಳಿದ ಇಬ್ಬರು ಖಾಸಗಿ ಆಸ್ಪತ್ರೆಯಲ್ಲಿ ಚಿಕಿತ್ಸೆ ಪಡೆದಿದ್ದರು. ಘಟನೆ ಬಳಿಕ ಪ್ರಧಾನಿ ನರೇಂದ್ರ ಮೋದಿ ಸಂತಾಪ ಸೂಚಿಸಿದ್ದರು.

ಇದನ್ನೂ ಓದಿ: Road Accident: ಬೆಂಗಳೂರು, ಗದಗದಲ್ಲಿ ಸರಣಿ ಅಪಘಾತ; ಗ್ಯಾಸ್ ಟ್ಯಾಂಕರ್ ಸ್ಫೋಟಕ್ಕೆ ಮನೆಗಳೇ ಭಸ್ಮ

Continue Reading

ದೇಶ

ISIS Terrorists: ಐಪಿಎಲ್‌ ಪಂದ್ಯಕ್ಕೂ ಮೊದಲೇ ಗುಜರಾತ್‌ನಲ್ಲಿ ನಾಲ್ವರು ಐಸಿಸ್‌ ಉಗ್ರರ ಬಂಧನ; ಇವರ ಸಂಚೇನು?

ISIS Terrorists: ಗುಜರಾತ್‌ನ ಅಹಮದಾಬಾದ್‌ನಲ್ಲಿರುವ ನರೇಂದ್ರ ಮೋದಿ ಸ್ಟೇಡಿಯಂನಲ್ಲಿ ಐಪಿಎಲ್‌ನ ಎಲಿಮಿನೇಟರ್‌ ಹಾಗೂ ಕ್ವಾಲಿಫೈಯರ್‌ ಪಂದ್ಯಗಳು ನಡೆಯುವ ಕೆಲವೇ ಗಂಟೆಗಳ ಮೊದಲೇ ಉಗ್ರರನ್ನು ಬಂಧಿಸಿರುವುದು ಪ್ರಾಮುಖ್ಯತೆ ಪಡೆದಿದೆ.

VISTARANEWS.COM


on

ISIS Terrorists
Koo

ಅಹಮದಾಬಾದ್: ಗುಜರಾತ್‌ ಭಯೋತ್ಪಾದನಾ ನಿಗ್ರಹ ದಳವು (ATS) ಅಹಮದಾಬಾದ್‌ ಏರ್‌ಪೋರ್ಟ್‌ನಲ್ಲಿ ನಾಲ್ವರು ಐಸಿಸ್‌ ಉಗ್ರರನ್ನು (ISIS Terrorists) ಬಂಧಿಸಿದ್ದಾರೆ. ಸರ್ದಾರ್‌ ವಲ್ಲಭಭಾಯಿ ಅಂತಾರಾಷ್ಟ್ರೀಯ ವಿಮಾನ ನಿಲ್ದಾಣದಲ್ಲಿ (Ahmedabad Airport) ಎಟಿಸ್‌ ಸಿಬ್ಬಂದಿಯು ಶ್ರೀಲಂಕಾದ ನಾಲ್ವರು ಉಗ್ರರನ್ನು ಬಂಧಿಸಿದ್ದಾರೆ. ನಾಲ್ವರೂ ಉಗ್ರರು ವಿಮಾನ ನಿಲ್ದಾಣದಲ್ಲಿ ತಮ್ಮ ಹ್ಯಾಂಡ್ಲರ್‌ಗಾಗಿ ಕಾಯುತ್ತಿರುವಾಗಲೇ ಅವರನ್ನು ಬಲೆಗೆ ಹಾಕಿದ್ದಾರೆ. ನಾಲ್ವರನ್ನೂ ವಿಚಾರಣೆ ನಡೆಸುತ್ತಿದ್ದಾರೆ ಎಂದು ತಿಳಿದುಬಂದಿದೆ.

ನಾಲ್ವರನ್ನೂ ಬಂಧಿಸುತ್ತಲೇ ಅಜ್ಞಾತ ಸ್ಥಳಕ್ಕೆ ಕರೆದೊಯ್ದ ಎಟಿಎಸ್‌ ಸಿಬ್ಬಂದಿಯು ವಿಚಾರಣೆ ನಡೆಸುತ್ತಿದ್ದಾರೆ. ನಾಲ್ವರೂ ಉಗ್ರರು ವಿಮಾನ ನಿಲ್ದಾಣದಲ್ಲಿ ಏನು ಮಾಡುತ್ತಿದ್ದರು? ಅವರು ರೂಪಿಸಿದ ಸಂಚೇನು? ಎಲ್ಲಿಗೆ ಹೋಗುವವರಿದ್ದರು ಎಂಬುದರ ಕುರಿತು ಹೆಚ್ಚಿನ ಮಾಹಿತಿ ಲಭ್ಯವಾಗಿಲ್ಲ. ಗುಜರಾತ್‌ನ ಅಹಮದಾಬಾದ್‌ನಲ್ಲಿರುವ ನರೇಂದ್ರ ಮೋದಿ ಸ್ಟೇಡಿಯಂನಲ್ಲಿ ಐಪಿಎಲ್‌ನ ಎಲಿಮಿನೇಟರ್‌ ಹಾಗೂ ಕ್ವಾಲಿಫೈಯರ್‌ ಪಂದ್ಯಗಳು ನಡೆಯುವ ಕೆಲವೇ ಗಂಟೆಗಳ ಮೊದಲೇ ಉಗ್ರರನ್ನು ಬಂಧಿಸಿರುವುದು ಪ್ರಾಮುಖ್ಯತೆ ಪಡೆದಿದೆ.

ಮೊದಲ ಕ್ವಾಲಿಫೈಯರ್​ ಪಂದ್ಯ ಮಂಗಳವಾರ (ಮೇ 21) ಅಹಮದಾಬಾದ್​ನಲ್ಲಿ ನಡೆಯಲಿದೆ. ಈ ಪಂದ್ಯದಲ್ಲಿ ಕೆಕೆಆರ್​ ಮತ್ತು ಸನ್​ರೈಸರ್ಸ್​ ಹೈದರಾಬಾದ್​ ಮುಖಾಮುಖಿಯಾಗಲಿವೆ. ಬುಧವಾರ (ಮೇ 22) ನಡೆಯುವ ಎಲಿಮಿನೇಟರ್​ ಪಂದ್ಯದಲ್ಲಿ ಆರ್​ಸಿಬಿ ತಂಡ ರಾಜಸ್ಥಾನ್​ ರಾಯಲ್ಸ್​ ವಿರುದ್ಧ ಆಡಲಿದೆ. ಈ ಪಂದ್ಯವೂ ಅಹಮದಾಬಾದ್​ನ ನರೇಂದ್ರ ಮೋದಿ ಕ್ರಿಕೆಟ್​ ಸ್ಟೇಡಿಯಂನಲ್ಲಿ ನಡೆಯಲಿದೆ. ಇದರಿಂದಾಗಿ ಅಹಮದಾಬಾದ್‌ನಲ್ಲಿ ಬಿಗಿ ಬಂದೋಬಸ್ತ್‌ ಏರ್ಪಡಿಸಲಾಗಿದೆ. ಇದರ ಮಧ್ಯೆಯೇ, ಏರ್‌ಪೋರ್ಟ್‌ನಲ್ಲಿ ನಾಲ್ವರು ಉಗ್ರರ ಬಂಧನವಾಗಿದೆ.

ಮೇ 12ರಂದು ಬಾಂಬ್‌ ಬೆದರಿಕೆ

ಮೇ 12ರಂದು ಅಹಮದಾಬಾದ್‌ ವಿಮಾನ ನಿಲ್ದಾಣಕ್ಕೆ ಬಾಂಬ್ ಬೆದರಿಕೆ ಒಡ್ಡಲಾಗಿತ್ತು. ಇ-ಮೇಲ್‌ ಮೂಲಕ ಹುಸಿ ಬಾಂಬ್‌ ಬೆದರಿಕೆ ಒಡ್ಡಲಾಗಿತ್ತು. ಬೆದರಿಕೆಯ ಮೇಲ್‌ ಬರುತ್ತಲೇ ಭದ್ರತಾ ಸಿಬ್ಬಂದಿಯು ವಿಮಾನ ನಿಲ್ದಾಣದಲ್ಲಿ ಪರಿಶೀಲನೆ ನಡೆಸಿತ್ತು. ಇಡೀ ವಿಮಾನ ನಿಲ್ದಾನದಲ್ಲಿ ಅನುಮಾನಾಸ್ಪದ ವ್ಯಕ್ತಿಗಳು, ವಸ್ತುಗಳಿಗಾಗಿ ಇನ್ನಿಲ್ಲದಂತೆ ಪರಿಶೀಲನೆ ನಡೆಸಲಾಗಿತ್ತು. ಹಾಗಾಗಿ, ಉಗ್ರರ ಬಂಧನವು ಮತ್ತಷ್ಟು ಪ್ರಾಮುಖ್ಯತೆ ಪಡೆದಿದೆ.

ಇದನ್ನೂ ಓದಿ: ISIS link: ಐಸಿಸ್‌ ಲಿಂಕ್ ಕೇಸ್‌ನಲ್ಲಿ ಮಾಜಿ ಶಾಸಕ ಇದಿನಬ್ಬ ಮೊಮ್ಮಗನಿಗೆ ದಿಲ್ಲಿ ಹೈಕೋರ್ಟ್‌ ಜಾಮೀನು; ಕೋರ್ಟ್‌ ಕೊಟ್ಟ ಕಾರಣ ನೋಡಿ!

Continue Reading

ಕ್ರೈಂ

Prajwal Revanna Case: ಎಸ್‌ಐಟಿ ಕೇಸ್‌ಗಳಿಗಾಗಿ ಇನ್ನೊಬ್ಬ ಎಸ್‌ಪಿಪಿ ನೇಮಕ; ಹೈಕೋರ್ಟ್‌ನಲ್ಲಿ ವಾದಕ್ಕೆ ಸಜ್ಜಾದ ಸರ್ಕಾರ

Prajwal Revanna Case: ಹೈಕೋರ್ಟ್‌ನಲ್ಲಿ ವಾದಿಸಲು ಹಿರಿಯ ವಕೀಲ ಪ್ರೊ. ರವಿವರ್ಮಾ ಕುಮಾರ್ ಅವರನ್ನು ನೇಮಿಸಿರುವ ರಾಜ್ಯ ಸರ್ಕಾರ, ಹೈಕೋರ್ಟ್‌ನಲ್ಲಿ ವಾದಿಸಲು ತಯಾರಿ ನಡೆಸಿದೆ. ಇವರನ್ನು ಸದ್ಯ ಕೆ.ಆರ್. ನಗರ ಸಂತ್ರಸ್ತೆಯ ಕಿಡ್ನ್ಯಾಪ್‌ ಕೇಸ್‌ ಹಾಗೂ ಹೊಳೆನರಸೀಪುರ ಲೈಂಗಿಕ ದೌರ್ಜನ್ಯ ಮತ್ತು ಅತ್ಯಾಚಾರ ಪ್ರಕರಣದಲ್ಲಿ ವಾದಿಸಲು ನೇಮಿಸಲಾಗಿದೆ. ಈ ಪ್ರಕರಣಗಳ ತನಿಖೆಗೆ ರಚಿಸಲಾಗಿರುವ ವಿಶೇಷ ತನಿಖಾ ದಳವು ದಾಖಲಿಸುವ ಪ್ರಕರಣಗಳಲ್ಲಿ ನ್ಯಾಯಾಲಯದಲ್ಲಿ ಹಾಜರಾಗಲು ಹಾಗೂ ಪ್ರಕರಣಗಳನ್ನು ನಡೆಸಲು ಸರ್ಕಾರಿ ಅಭಿಯೋಜಕರ ತಂಡವನ್ನು ಬಲಪಡಿಸುವ ಉದ್ದೇಶದಿಂದ ಈ ನೇಮಕ ನಡೆದಿದೆ ಎನ್ನಲಾಗಿದೆ.

VISTARANEWS.COM


on

Prajwal Revanna Case One more SPP appointed for SIT cases Govt gears up for arguments in High Court
Koo

ಬೆಂಗಳೂರು: ಹಾಸನ ಸಂಸದ (Hassan MP) ಪ್ರಜ್ವಲ್ ರೇವಣ್ಣ (Prajwal Revanna Case) ಅವರದ್ದು ಎನ್ನಲಾದ ಅಶ್ಲೀಲ ವಿಡಿಯೊ ಪೆನ್‌ಡ್ರೈವ್‌ ಪ್ರಕರಣಕ್ಕೆ (Hassan Pen Drive Case) ಸಂಬಂಧಪಟ್ಟಂತೆ ಎಸ್‌ಐಟಿ ಮುಂದೆ ದಾಖಲಾಗುವ ಪ್ರಕರಣಗಳಿಗೆ ಇಬ್ಬರು ಹೆಚ್ಚುವರಿ ವಿಶೇಷ ಸರ್ಕಾರಿ ಅಭಿಯೋಜಕರನ್ನು (Special Public Prosecutors) ನೇಮಿಸಿದ್ದ ರಾಜ್ಯ ಸರ್ಕಾರವು ಈಗ ಎಸ್ಐಟಿ ಪರ ವಾದಿಸಲು ಮತ್ತೊಬ್ಬ ಎಸ್‌ಪಿಪಿಯನ್ನು ನೇಮಕ ಮಾಡಿದೆ. ಹಿರಿಯ ವಕೀಲ ಪ್ರೊ. ರವಿವರ್ಮಾ ಕುಮಾರ್ ಅವರನ್ನು ನೇಮಿಸಿ ಆದೇಶಿಸಿದೆ.

ಹೈಕೋರ್ಟ್‌ನಲ್ಲಿ ವಾದಿಸಲು ಹಿರಿಯ ವಕೀಲ ಪ್ರೊ. ರವಿವರ್ಮಾ ಕುಮಾರ್ ಅವರನ್ನು ನೇಮಿಸಿರುವ ರಾಜ್ಯ ಸರ್ಕಾರ, ಹೈಕೋರ್ಟ್‌ನಲ್ಲಿ ವಾದಿಸಲು ತಯಾರಿ ನಡೆಸಿದೆ. ಇವರನ್ನು ಸದ್ಯ ಕೆ.ಆರ್. ನಗರ ಸಂತ್ರಸ್ತೆಯ ಕಿಡ್ನ್ಯಾಪ್‌ ಕೇಸ್‌ ಹಾಗೂ ಹೊಳೆನರಸೀಪುರ ಲೈಂಗಿಕ ದೌರ್ಜನ್ಯ ಮತ್ತು ಅತ್ಯಾಚಾರ ಪ್ರಕರಣದಲ್ಲಿ ವಾದಿಸಲು ನೇಮಿಸಲಾಗಿದೆ.

ಈ ಪ್ರಕರಣಗಳ ತನಿಖೆಗೆ ರಚಿಸಲಾಗಿರುವ ವಿಶೇಷ ತನಿಖಾ ದಳವು ದಾಖಲಿಸುವ ಪ್ರಕರಣಗಳಲ್ಲಿ ನ್ಯಾಯಾಲಯದಲ್ಲಿ ಹಾಜರಾಗಲು ಹಾಗೂ ಪ್ರಕರಣಗಳನ್ನು ನಡೆಸಲು ಸರ್ಕಾರಿ ಅಭಿಯೋಜಕರ ತಂಡವನ್ನು ಬಲಪಡಿಸುವ ಉದ್ದೇಶದಿಂದ ಈ ನೇಮಕ ನಡೆದಿದೆ ಎನ್ನಲಾಗಿದೆ.

HD Revanna: ಹೊಳೆನರಸೀಪುರ ಲೈಂಗಿಕ ದೌರ್ಜನ್ಯ ಪ್ರಕರಣದಲ್ಲೂ ಎಚ್‌ಡಿ ರೇವಣ್ಣಗೆ ಜಾಮೀನು, ಬಿಗ್‌ ರಿಲೀಫ್

ಹೊಳೆನರಸೀಪುರ (Holenarasipura) ಠಾಣೆಯಲ್ಲಿ ದಾಖಲಾಗಿದ್ದ ಲೈಂಗಿಕ ದೌರ್ಜನ್ಯ (physical abuse) ಪ್ರಕರಣದಲ್ಲೂ ಮಾಜಿ ಸಚಿವ ಎಚ್‌ಡಿ ರೇವಣ್ಣ (HD Revanna case) ಅವರಿಗೆ ಜಾಮೀನು (Bail) ಮಂಜೂರಾಗಿದೆ. ಇನ್ನೊಂದು ಪ್ರಕರಣದಲ್ಲಿ ಈಗಾಗಲೇ ಜಾಮೀನು ದೊರೆತಿರುವುದರಿಂದ ರೇವಣ್ಣಗೆ ಬಿಗ್‌ ರಿಲೀಫ್‌ ದೊರೆತಂತಾಗಿದೆ.

ಜಾಮೀನಿಗೆ ಐದು ಲಕ್ಷ ರೂಪಾಯಿ ಬಾಂಡ್ ಹಾಗೂ ಒಬ್ಬರ ಶ್ಯೂರಿಟಿ ನೀಡುವಂತೆ ನ್ಯಾಯಾಧೀಶರು ಷರತ್ತು ವಿಧಿಸಿ ಜಾಮೀನು ಮಂಜೂರು ಮಾಡಿದ್ದಾರೆ. 42ನೇ ಎಸಿಎಂಎಂ ಕೋರ್ಟ್ ನ್ಯಾಯಾಧೀಶರಾದ ಪ್ರೀತ್ ಜೆ. ಅವರು ಆದೇಶ ಹೊರಡಿಸಿದ್ದಾರೆ. ಇಂದು ವಿಚಾರಣೆಗೆ ರೇವಣ್ಣ ಬರಿಗಾಲಲ್ಲೇ ಹಾಜರಾಗಿದ್ದರು. ಜಾಮೀನು ದೊರೆತ ಬಳಿಕ ಅವರ ಮುಖದಲ್ಲಿ ನಿರಾಳತೆ ಕಂಡುಬಂತು.

ಗುರುವಾರ ಮಧ್ಯಂತರ ಜಾಮೀನು ನೀಡಿ ಶುಕ್ರವಾರಕ್ಕೆ (ಮೇ 17) ವಿಚಾರಣೆಯನ್ನು ಮುಂದೂಡಲಾಗಿತ್ತು. ಶುಕ್ರವಾರ ವಾದ – ಪ್ರತಿವಾದವನ್ನು ಆಲಿಸಿದ ನ್ಯಾಯಾಧೀಶರು ಸೋಮವಾರಕ್ಕೆ (ಮೇ 20) ವಿಚಾರಣೆಯನ್ನು ಮುಂದೂಡಿದ್ದರು. ಇದೀಗ ಎರಡನೇ ಪ್ರಕರಣದಲ್ಲಿ ಅವರಿಗೆ ಜಾಮೀನು ಲಭ್ಯವಾಗಿದೆ.

ಚಾಮರಾಜನಗರದ ಸಂತ್ರಸ್ತೆಯ ಕಿಡ್ನ್ಯಾಪ್‌ ಪ್ರಕರಣಕ್ಕೆ ಸಂಬಂಧಿಸಿ ರೇವಣ್ಣ ಅವರನ್ನು ಬಂಧಿಸಿ ಪರಪ್ಪನ ಅಗ್ರಹಾರ ಜೈಲಿಗೆ ಕಳುಹಿಸಲಾಗಿತ್ತು. ಆರು ದಿನಗಳ ನಿರಂತರ ಕಾನೂನು ಸಮರದ ಬಳಿಕ ಅವರಿಗೆ ಜಾಮೀನು ದೊರೆತಿತ್ತು.

ಹೊಳೆನರಸೀಪುರ ಪ್ರಕರಣದಲ್ಲಿ ಎಸ್‌ಐಟಿ ಪರ ವಾದ ಮಂಡಿಸಿದ ಎಸ್‌ಪಿಪಿ ಜಯ್ನಾ ಕೊಠಾರಿ, ಎಚ್.‌ ಡಿ. ರೇವಣ್ಣ ಅವರಿಗೆ ಯಾವುದೇ ಕಾರಣಕ್ಕೂ ಜಾಮೀನು ನೀಡಬಾರದು ಎಂದು ಮನವಿ ಮಾಡಿದ್ದರು. ಆರೋಪಿ ರೇವಣ್ಣ ಅವರನ್ನು ಪೊಲೀಸರ ವಶಕ್ಕೆ ನೀಡಬೇಕು. ಇದೇ ಪ್ರಕರಣದ ಇನ್ನೊಬ್ಬ ಆರೋಪಿ ವಿಚಾರಣೆಗೆ ಹಾಜರಾಗಿಲ್ಲ. ಮತ್ತೊಬ್ಬ ಆರೋಪಿ ದೇಶ ಬಿಟ್ಟು ಹೋಗಿದ್ದಾರೆ. ಹೀಗಾಗಿ ಸಮಯ ನೀಡಬಾರದು. ಇಂದೇ ವಿಚಾರಣೆ ನಡೆಸಿ ಆದೇಶ ನೀಡಿ ಅಥವಾ ಪೊಲೀಸರ ವಶಕ್ಕೆ ನೀಡಬೇಕು ಎಂದು ವಾದಿಸಿದರು.

ಇದಕ್ಕೆ ಪ್ರತಿವಾದ ಮಂಡಿಸಿದ ರೇವಣ್ಣ ಪರ ವಕೀಲ ಅರುಣ್, ಎಚ್.ಡಿ. ರೇವಣ್ಣ ವಿರುದ್ಧ ಯಾವುದೇ ನಾನ್ ಬೇಲೆಬಲ್ ಸೆಕ್ಷನ್ ಇಲ್ಲ. ಜಾಮೀನು ನೀಡುವಂತಹ ಸೆಕ್ಷನ್‌ಗಳು ಇವೆ ಎಂದು ಹೇಳಿದರು. ನಾನ್ ಬೇಲೆಬಲ್ ಸೆಕ್ಷನ್ ಪ್ರಕರಣದಲ್ಲಿ ಸರ್ಕಾರದ ಪರ ವಕೀಲರಿಗೆ ಆಕ್ಷೇಪಣೆ ಸಲ್ಲಿಸುವ ಅಧಿಕಾರವೇ ಇಲ್ಲ. ಎಸ್‌ಪಿಪಿಗೆ ಆಕ್ಷೇಪಣೆ ಸಲ್ಲಿಸುವ ಅಧಿಕಾರ ಇದೆಯೇ ಎಂಬುದು ಮೊದಲು ನಿರ್ಧಾರ ಆಗಲಿ. ಈಗಾಗಲೇ ಎಚ್.ಡಿ. ರೇವಣ್ಣ ಅವರನ್ನು ಬಂಧಿಸಲಾಗಿತ್ತು. ಆಗಲೇ ಈ ಪ್ರಕರಣದ ಬಗ್ಗೆ ವಿಚಾರಣೆ ನಡೆಸಬಹುದಿತ್ತು. ಈಗ ಎಸ್ಐಟಿ ಕಸ್ಟಡಿಗೆ ಕೇಳುತ್ತಿರುವುದು ಸರಿಯಲ್ಲ ಎಂದು ಹೇಳಿದರು.

ರೇವಣ್ಣ ಪರ ವಕೀಲರ ವಾದ ಹೀಗಿತ್ತು

ವಾದದ ವೇಳೆ ರೇವಣ್ಣ ಪರ ವಕೀಲರು ಪ್ರಕರಣದ ದೋಷಗಳನ್ನು ಕೋರ್ಟ್‌ ಮುಂದೆ ಎತ್ತಿ ತೋರಿಸಿದರು. ಪೊಲೀಸರು ದಾಖಲಿಸಿಕೊಂಡಿರುವ ದೂರಿನಲ್ಲಿ ಉಲ್ಲೇಖವಾಗಿರುವ ಮಹಿಳೆಯ ಹೇಳಿಕೆಯಲ್ಲಿನ ಗೊಂದಲದ ಬಗ್ಗೆ ಗಮನ ಸೆಳೆದಿದ್ದಾರೆ.

ಹೊಳೆನರಸೀಪುರದಲ್ಲಿ ಎಚ್.ಡಿ. ರೇವಣ್ಣ ನಡೆಸಿದ್ದಾರೆನ್ನಲಾದ ಲೈಂಗಿಕ ದೌರ್ಜನ್ಯ ಪ್ರಕರಣಕ್ಕೆ ಸಂಬಂಧಿಸಿದಂತೆ ರೇವಣ್ಣ ಅವರಿಗೆ ಜಾಮೀನು ನೀಡುವ ಬಗ್ಗೆ ವಾದ ಮಂಡಿಸಿದ ವಕೀಲ ಸಿ.ವಿ. ನಾಗೇಶ್‌, ದೂರುದಾರೆಯ ಹೇಳಿಕೆ ಬಗ್ಗೆ ಕೋರ್ಟ್‌ ಗಮನಕ್ಕೆ ತಂದರು. ಈ ಹೇಳಿಕೆಯು ಸಂಪೂರ್ಣ ಗೊಂದಲಮಯವಾಗಿದೆ. ಬೇಕೆಂದೇ ನಮ್ಮ ಕಕ್ಷಿದಾರರನ್ನು ಇಲ್ಲಿ ಫಿಟ್‌ ಮಾಡಲಾಗಿದೆ. ಇದೊಂದು ಸುಳ್ಳು ಕೇಸ್‌ ಎಂದು ವಾದಿಸಿದರು.

ಕೋರ್ಟ್‌ನಲ್ಲಿ ವಾದ ಮಂಡಿಸಿದ ಸಿ.ವಿ. ನಾಗೇಶ್‌, ದೂರುದಾರರು ಹೊಳೆನರಸೀಪುರ ಪೊಲೀಸ್ ಠಾಣೆಗೆ ದೂರು ನೀಡಿಲ್ಲ. ಹೊಳೆನರಸೀಪುರ ಪೊಲೀಸ್ ಠಾಣೆ ಸಬ್ ಇನ್ಸ್‌ಪೆಕ್ಟರ್ ಒಬ್ಬರು ಬೆಂಗಳೂರಿಗೆ ಬಂದು ದೂರುದಾರರಿಂದ ತಮಗೆ ನೀಡಿದಂತೆ ದೂರು ಬರೆಸಿಕೊಂಡು ಹೋಗಿ ಕೇಸ್ ದಾಖಲಿಸಿದ್ದಾರೆ ಎಂಬುದನ್ನು ಗಮನಕ್ಕೆ ತಂದರು. ಅಲ್ಲದೆ, ಪೊಲೀಸರು ದಾಖಲು ಮಾಡಿಕೊಂಡಿರುವ ಹೇಳಿಕೆಯನ್ನು ಕೋರ್ಟ್‌ ಮುಂದೆ ಓದಿದರು.
ಇದು ಸಂತ್ರಸ್ತೆ ನೀಡಿದ ದೂರೇ ಅಲ್ಲ

ಪ್ರಜ್ವಲ್ ರೇವಣ್ಣ ಮೇಲೆ‌ ಲೈಂಗಿಕ ದೌರ್ಜನ್ಯವೆಸಗಿರುವ ಬಗ್ಗೆ ಏಪ್ರಿಲ್ 24ರ ರಾತ್ರಿ‌ 11 ಗಂಟೆಗೆ ಬೆಂಗಳೂರಿನಲ್ಲಿರುವ ಸಂತ್ರಸ್ತೆಯೊಬ್ಬರು ದೂರು ನೀಡಲು‌ ಬಂದಿದ್ದರು. ಅವರು ಮಾನಸಿಕವಾಗಿ ಕುಗ್ಗಿ ಹೋಗಿದ್ದರು. ಆ ಬಗ್ಗೆ ಹಿರಿಯ ಅಧಿಕಾರಿಗಳಿಗೆ ವಿಷಯ ತಿಳಿಸಿ, ಮಹಿಳಾ ಸಿಬ್ಬಂದಿಯೊಂದಿಗೆ ಸಂತ್ರಸ್ತೆ ಇರುವ ಸ್ಥಳಕ್ಕೆ ಹೋಗಿ ದೂರು ಪಡೆದು‌ ಕೇಸ್ ದಾಖಲಿಸಿದ್ದಾಗಿ ಸ್ಟೇಷನ್ ಬುಕ್‌ನಲ್ಲಿ‌ ಉಲ್ಲೇಖಿಸಿದ್ದಾರೆ. ಇಲ್ಲಿ ಸ್ಪಷ್ಟವಾಗಿ ಗೊತ್ತಾಗುವುದೇನೆಂದರೆ ಈ ದೂರು ರಿಜಿಸ್ಟರ್ ಆಗಿರುವುದಲ್ಲ‌. ದೂರನ್ನು ತಿದ್ದುಪಡಿ ಮಾಡಿ ತಮಗೆ ಬೇಕಾದ ಹಾಗೆ ಮಾಡಿಕೊಂಡಿದ್ದಾರೆ. ರೇವಣ್ಣ ವಿರುದ್ಧ ದೂರುದಾರೆ ನೀಡಿದ ದೂರನ್ನು ಮಹಿಳಾ ಅಧಿಕಾರಿ ದಾಖಲಿಸಿಕೊಳ್ಳಲ್ಲಿಲ್ಲ. ಆಕೆಯ ಹೇಳಿಕೆಯನ್ನು ಲಿಖಿತ ರೂಪದಲ್ಲಿ ದಾಖಲಿಸಿಕೊಂಡಿಲ್ಲ. ಇದು ಸಂತ್ರಸ್ತೆ ನೀಡಿದ ದೂರೇ ಅಲ್ಲ. ಬೇಕಂತಲೇ ಸೃಷ್ಟಿಯಾಗಿರುವ ಕೇಸ್ ಆಗಿದೆ. ಆಕೆಗೆ ಲೈಂಗಿಕ ದೌರ್ಜನ್ಯ ಅಂದರೇನು ಅಂತ ಗೊತ್ತೇ ಇರುವುದಿಲ್ಲ ಎಂದು ಸಿ.ವಿ. ನಾಗೇಶ್ ವಾದಿಸಿದರು.

ಸಂತ್ರಸ್ತೆ ಹೇಳಿಕೆಯಲ್ಲಿ ಭಾರಿ ಗೊಂದಲ!

ಲೈಂಗಿಕ ದೌರ್ಜನ್ಯವೇ ಬೇರೆ, ಅತ್ಯಾಚಾರವೇ ಬೇರೆ. ಸಂತ್ರಸ್ತೆ ನೀಡಿದ ದೂರಿನ ಅಂಶಗಳನ್ನು ಓದಿ ಹೇಳಿದ ಸಿ.ವಿ. ನಾಗೇಶ್‌, ಸಂತ್ರಸ್ತೆಯ ಪತಿ ಆಕೆಯ ಮೇಲೆ ಪಟ್ಟ ಅನುಮಾನವನ್ನು ದೂರಿನಲ್ಲಿ ಉಲ್ಲೇಖಿಸಲಾಗಿದೆ. ಆಕೆ ನನ್ನ ಮೇಲೆ ಆ ರೀತಿ ಕೃತ್ಯ ನಡೆದಿಲ್ಲ ಎಂದು ಹೇಳಿದ್ದಾಳೆ. ನಾಲ್ಕೈದು ವರ್ಷಗಳ ಹಿಂದೆ ನಡೆದಿರುವ ಕೃತ್ಯದ ಬಗ್ಗೆ ಆರೋಪಿಸಿದ್ದಾರೆ. ಒಂದು ಕಡೆ ರೇವಣ್ಣ ಹಾಗೂ ಪ್ರಜ್ವಲ್‌ ರೇವಣ್ಣ ನೀಡಿದ್ದ ಲೈಂಗಿಕ ದೌರ್ಜನ್ಯದ ಬಗ್ಗೆ ಹೇಳುತ್ತಾರೆ. ಮತ್ತೊಂದೆಡೆ ಸಂತ್ರಸ್ತೆ ಗಂಡ ಬೇರೆ ಹೆಣ್ಣು‌ ಮಕ್ಕಳ ವಿಡಿಯೊ ಬಗ್ಗೆ ಕೇಳಿದಾಗ ನನ್ನ ಮೇಲೆ ಆ ರೀತಿ ಆಗಿಲ್ಲ‌ ಅಂತ ಹೇಳಿದ್ದಾಳೆ. ಮತ್ತೊಂದೆಡೆ ರೇವಣ್ಣ ಹಾಗೂ ಪ್ರಜ್ವಲ್ ರೇವಣ್ಣ ಅವರ ಲೈಂಗಿಕ ಕಿರುಕುಳ ತಾಳಲಾರದೆ ಮನೆ ಕೆಲಸ ಬಿಟ್ಟು ಬಂದೆ ಎಂದು ಹೇಳುತ್ತಾಳೆ. ತನಿಖಾಧಿಕಾರಿಗಳು ಸಂತ್ರಸ್ತೆ ಹೇಳಿಕೆ ಆಧಾರದ ಮೇಲೆ 376 ದಾಖಲಿಸಲು ಅನುಮತಿ ಕೇಳಿದ್ದಾರೆ. ಯಾರ ಮೇಲೆ ಸೆಕ್ಷನ್‌ 376 ದಾಖಲಿಸುತ್ತಾರೆ ಎಂದು ಸಿ.ವಿ. ನಾಗೇಶ್ ಪ್ರಶ್ನೆ ಮಾಡಿದರು.

ಇದನ್ನೂ ಓದಿ: CM Siddaramaiah: ಲೋಕಸಭಾ ಚುನಾವಣೆಯಲ್ಲಿ ಸಿಎಂ ಸಿದ್ದರಾಮಯ್ಯ ಪ್ರಕಾರ ಕಾಂಗ್ರೆಸ್‌ಗೆ ಎಷ್ಟು ಸೀಟ್‌? ಸಂಪುಟ ಪುನಾರಚನೆ ಇಲ್ಲ!

ದೂರುದಾರರು ಲೈಂಗಿಕ ದೌರ್ಜನ್ಯ ತಾಳಲಾರದೆ 4 ವರ್ಷದ ಹಿಂದೆ ಮನೆ ಕೆಲಸ ಬಿಟ್ಟೆ ಎಂದು ಹೇಳುತ್ತಾರೆ. ಮನೆ ಬಿಟ್ಟು ಬಂದಿದ್ದಕ್ಕೆ ಪೊಲೀಸರನ್ನು ಕಳುಹಿಸಿ ಆಶ್ರಯ ಮನೆ ಖಾಲಿ ಮಾಡಿಸಿದರು ಎಂದು ಆರೋಪಿಸುತ್ತಾರೆ. ತಮ್ಮ ಒಡವೆ, ಬಟ್ಟೆ ಎಲ್ಲವನ್ನೂ ಕಿತ್ತುಕೊಂಡರು ಎಂದು ಹೇಳುತ್ತಾರೆ. ಹಾಗಾದರೆ ನಾಲ್ಕೂವರೆ ವರ್ಷದ ಹಿಂದೆ ಅವರ ಮನೆಯಲ್ಲಿದ್ದಾಗ ನಡೆದ ಅತ್ಯಾಚಾರ, ಲೈಂಗಿಕ ದೌರ್ಜನ್ಯವು ಅವರಿಗೆ ಗೊತ್ತಾಗಲಿಲ್ಲವೇ? ಮನೆ ಖಾಲಿ ಮಾಡಿಸಿದ ಮೇಲೆ ಯಾಕೆ ಲೈಂಗಿಕ ದೌರ್ಜನ್ಯ, ಅತ್ಯಾಚಾರ ನಡೆದಿದೆ ಅಂತ ಗೊತ್ತಾಯ್ತಾ ಎಂದು ಸಿ.ವಿ. ನಾಗೇಶ್ ಪ್ರಶ್ನೆ ಮಾಡಿದರು.

Continue Reading
Advertisement
Money Guide
ಮನಿ-ಗೈಡ್2 mins ago

Money Guide: ಮನೆಯಲಿ ಇದ್ದರೆ ಚಿನ್ನ ಈ ನಿಯಮ ಅರಿತಿರುವುದು ಚೆನ್ನ: ಗೋಲ್ಡ್‌ ಟ್ಯಾಕ್ಸ್‌ ಏನು ಹೇಳುತ್ತದೆ?

Yamuna Bridge
ವೈರಲ್ ನ್ಯೂಸ್7 mins ago

Yamuna Bridge: ಯಮುನಾ ಸೇತುವೆಯ ಅದ್ಭುತ ಚಿತ್ರ ಹಂಚಿಕೊಂಡ ಭಾರತೀಯ ರೈಲ್ವೆ: ವಾವ್‌ ತಾಜ್‌ ಎಂದ ನೆಟ್ಟಿಗರು; ನೀವೂ ನೋಡಿ

KKR vs SRH Qualifier 1
ಕ್ರೀಡೆ22 mins ago

KKR vs SRH Qualifier 1: ಕೆಕೆಆರ್​-ಹೈದರಾಬಾದ್​ ಮುಖಾಮುಖಿ ದಾಖಲೆ, ಪಿಚ್​ ರಿಪೋರ್ಟ್​ ಹೇಗಿದೆ?

Road Accident
ಪ್ರಮುಖ ಸುದ್ದಿ26 mins ago

Road Accident: ಪಿಕ್‌ಅಪ್‌ ವಾಹನ ಕಂದಕಕ್ಕೆ ಬಿದ್ದು 18 ಕಾರ್ಮಿಕರ ದುರ್ಮರಣ; ಕೆಲಸಕ್ಕೆ ಹೊರಟವರು ಮಸಣಕ್ಕೆ!

theft case
ತುಮಕೂರು47 mins ago

Theft Case : ಕಳ್ಳತನವೂ ಈಗ ಪ್ರೊಫೆಷನಲ್‌; ಕದಿಯೋಕೆ ತಿಂಗಳ ಸ್ಯಾಲರಿ ಕೊಡುತ್ತಿದ್ದ ಪ್ರಳಯಾಂತಕ!

Physical Abuse & Murder
ದೇಶ49 mins ago

Physical Abuse & Murder: ಬಾಲಕಿ ಮೇಲೆ ಅತ್ಯಾಚಾರ, ಸಜೀವ ದಹನ ಕೇಸ್‌; ಹಂತಕರಿಗೆ ಮರಣದಂಡನೆ

Crime News
ದೇಶ51 mins ago

ಕುಡಿದು ಕಾರು ಓಡಿಸಿ ಇಬ್ಬರ ಜೀವ ತೆಗೆದ ಶ್ರೀಮಂತನ ಮಗನಿಗೆ 15 ಗಂಟೆಯೊಳಗೆ ಜಾಮೀನು! ಪ್ರಬಂಧ ಬರೆಯುವ ಶಿಕ್ಷೆ!

ISIS Terrorists
ದೇಶ52 mins ago

ISIS Terrorists: ಐಪಿಎಲ್‌ ಪಂದ್ಯಕ್ಕೂ ಮೊದಲೇ ಗುಜರಾತ್‌ನಲ್ಲಿ ನಾಲ್ವರು ಐಸಿಸ್‌ ಉಗ್ರರ ಬಂಧನ; ಇವರ ಸಂಚೇನು?

Deepika Padukone Enjoy Lunch Date After Casting Their Vote
ಬಾಲಿವುಡ್53 mins ago

Deepika Padukone: ವೋಟ್‌ ಮಾಡಿದ ದೀಪಿಕಾ ಪಡುಕೋಣೆ; ಅವರ ಹೊಟ್ಟೆ ನೋಡಿ ಗಂಡು ಮಗು ಎಂದ ನೆಟ್ಟಿಗರು!

Prajwal Revanna Case One more SPP appointed for SIT cases Govt gears up for arguments in High Court
ಕ್ರೈಂ1 hour ago

Prajwal Revanna Case: ಎಸ್‌ಐಟಿ ಕೇಸ್‌ಗಳಿಗಾಗಿ ಇನ್ನೊಬ್ಬ ಎಸ್‌ಪಿಪಿ ನೇಮಕ; ಹೈಕೋರ್ಟ್‌ನಲ್ಲಿ ವಾದಕ್ಕೆ ಸಜ್ಜಾದ ಸರ್ಕಾರ

Sharmitha Gowda in bikini
ಕಿರುತೆರೆ8 months ago

Geetha Serial Kannada: ನಿದ್ದೆ ಕದ್ದ ಚೋರಿ! ನಟಿ `ಭಾನುಮತಿ’ ಹಾಟ್‌ ಪೋಟೊಗಳಿಗೆ ಫ್ಯಾನ್ಸ್ ಫುಲ್ ಫಿದಾ

Kannada Serials
ಕಿರುತೆರೆ7 months ago

Kannada Serials TRP: 2ನೇ ಸ್ಥಾನದಲ್ಲಿ 2 ಧಾರಾವಾಹಿಗಳು; ಟಿಆರ್‌ಪಿ ರೇಸ್‌ನಲ್ಲಿಲ್ಲ ಭಾಗ್ಯಲಕ್ಷ್ಮೀ!

Bigg Boss- Saregamapa 20 average TRP
ಕಿರುತೆರೆ7 months ago

Kannada Serials TRP: ಏಳನೇ ಸ್ಥಾನಕ್ಕೆ ʻಅಮೃತಧಾರೆʼ ಕುಸಿತ; ಬಿಗ್‌ ಬಾಸ್‌-ಸರಿಗಮಪ ಟಿಆರ್‌ಪಿ ಎಷ್ಟು?

galipata neetu
ಕಿರುತೆರೆ6 months ago

Kanyadana Serial: ಕಿರುತೆರೆಗೆ ಮತ್ತೆ ಎಂಟ್ರಿ ಕೊಟ್ಟ ʻಗಾಳಿಪಟʼ ಖ್ಯಾತಿಯ ʻನೀತುʼ!

Kannada Serials
ಕಿರುತೆರೆ8 months ago

Kannada Serials TRP: ನಾಲ್ಕನೇ ಸ್ಥಾನಕ್ಕೆ ಕುಸಿತ ಕಂಡ ʻಸೀತಾ ರಾಮʼ; ಟಿಆರ್‌ಪಿ ರೇಸ್‌ಗೆ ʻಭಾಗ್ಯಲಕ್ಷ್ಮಿʼ ಬ್ಯಾಕ್‌!

Kannada Serials
ಕಿರುತೆರೆ8 months ago

Kannada Serials TRP: ಟಿಆರ್‌ಪಿಯಲ್ಲಿ ʻಭಾಗ್ಯಲಕ್ಷ್ಮೀʼ ಹವಾ; ʻಪುಟ್ಟಕ್ಕನ ಮಕ್ಕಳುʼ ಧಾರಾವಾಹಿಗೆ ಸಂಕಷ್ಟ!

Bigg Boss' dominates TRP; Sita Rama fell to the sixth position
ಕಿರುತೆರೆ7 months ago

Kannada Serials TRP: ಟಿಆರ್‌ಪಿಯಲ್ಲಿ ʻಬಿಗ್ ಬಾಸ್ʼದೇ ಮೇಲುಗೈ; 6ನೇ ಸ್ಥಾನಕ್ಕೆ ಕುಸಿದ ʻಸೀತಾ ರಾಮʼ

geetha serial Dhanush gowda engagement
ಕಿರುತೆರೆ5 months ago

Dhanush Gowda: ಗೀತಾ ಧಾರಾವಾಹಿ ನಟನ ನಿಶ್ಚಿತಾರ್ಥ; ಭವ್ಯಾಳ ಕಮೆಂಟ್‌ ಬಾಕ್ಸ್‌ ಆಫ್‌!

varun
ಕಿರುತೆರೆ6 months ago

Brindavana Serial: ʼಬೃಂದಾವನʼ ಧಾರಾವಾಹಿಯಲ್ಲಿ ದೊಡ್ಡ ಟ್ವಿಸ್ಟ್‌; ಪ್ರಮುಖ ಪಾತ್ರಧಾರಿಯೇ ಬದಲು

Kannada Serials
ಕಿರುತೆರೆ8 months ago

Kannada Serials TRP: ಟಿಆರ್‌ಪಿಯಲ್ಲಿ ಏರಿಕೆ ಕಂಡ ʻಅಮೃತಧಾರೆʼ; ʻಗಟ್ಟಿಮೇಳʼಕ್ಕೆ ನಾಲ್ಕನೇ ಸ್ಥಾನ!

Karnataka Rain
ಮಳೆ3 hours ago

Karnataka Rain : ಬಂಗಾಳ ಕೊಲ್ಲಿಯಲ್ಲಿ ವಾಯುಭಾರ ಕುಸಿತ; ಸಮುದ್ರಕ್ಕಿಳಿಯದಂತೆ ಮೀನುಗಾರರಿಗೆ ಎಚ್ಚರಿಕೆ

Karnataka Rain
ಮಳೆ1 day ago

Karnataka Rain : ಒಂದೇ ಮಳೆಗೆ ಹೊಳೆಯಂತಾದ ಬೆಂಗಳೂರು ರಸ್ತೆಗಳು! ಕಳಸದಲ್ಲೂ ಮುಂದುವರಿದ ಅಬ್ಬರ

Karnataka rain
ಮಳೆ1 day ago

Karnataka Rain : ವಿಜಯನಗರದಲ್ಲಿ ಸಿಡಿಲಿಗೆ ಜಾನುವಾರು ಬಲಿ; ಬೆಂಗಳೂರು ಸೇರಿ ಹಲವೆಡೆ ಭಾರಿ ಮಳೆ

Karnataka Rain
ಮಳೆ1 day ago

Karnataka Rain: ಧಾರಾಕಾರ ಮಳೆಗೆ ಕಾಂಪೌಂಡ್ ಕುಸಿದು 4 ಬೈಕ್‌ಗಳು ಜಖಂ; ಮದುವೆ ಮಂಟಪಕ್ಕೆ ನುಗ್ಗಿದ ನೀರು‌

Prajwal Revanna Case JDS calls CD Shivakumar pen drive gang
ರಾಜಕೀಯ3 days ago

Prajwal Revanna Case: CD ಶಿವಕುಮಾರ್ ಪೆನ್ ಡ್ರೈವ್ ಗ್ಯಾಂಗ್ ಎಂದ ಕುಟುಕಿದ ಜೆಡಿಎಸ್‌!

Karnataka weather Forecast
ಮಳೆ3 days ago

Karnataka Weather : ಮೈಸೂರು, ಮಂಡ್ಯ ಸೇರಿ ಈ 7 ಜಿಲ್ಲೆಗಳಲ್ಲಿ ವ್ಯಾಪಕ ಮಳೆ ಸಂಭವ

Dina Bhavishya
ಭವಿಷ್ಯ3 days ago

Dina Bhavishya : ಈ ರಾಶಿಯ ಪ್ರೇಮಿಗಳಿಗೆ ಮನೆಯಿಂದ ಸಿಗುತ್ತೆ ಗ್ರೀನ್‌ ಸಿಗ್ನಲ್‌

Karnataka Weather Forecast
ಮಳೆ4 days ago

Karnataka Weather : ಭಾರಿ ಮಳೆಗೆ ಕೊಟ್ಟೂರು ಬಸ್ ಸ್ಟ್ಯಾಂಡ್‌ ಜಲಾವೃತ; ‌ ತಾಯಿ-ಮಗ ಗ್ರೇಟ್‌ ಎಸ್ಕೇಪ್‌

Drowned in water
ಹಾಸನ4 days ago

Drowned in water : ಕೆರೆಯಲ್ಲಿ ಈಜಲು ಹೋದ ನಾಲ್ವರು ನೀರುಪಾಲು; ಓರ್ವ ಬಾಲಕ ಪಾರು

Suspicious Case
ಬೆಂಗಳೂರು4 days ago

Suspicious Case : ಬಾತ್‌ ರೂಂನಲ್ಲಿತ್ತು ಕಾಲೇಜು ಹುಡುಗಿ ಡೆಡ್‌ ಬಾಡಿ; ಕುತ್ತಿಗೆ ಕೊಯ್ದು ಸಾಯಿಸಿದವರು ಯಾರು?

ಟ್ರೆಂಡಿಂಗ್‌