Priyanka Chopra: ಪ್ರಿಯಾಂಕಾ ಚೋಪ್ರಾ ಬಂದ 2 ದಿನಗಳ ಬಳಿಕ ಭಾರತಕ್ಕೆ ಬಂದಿಳಿದ ನಿಕ್‌! - Vistara News

ಬಾಲಿವುಡ್

Priyanka Chopra: ಪ್ರಿಯಾಂಕಾ ಚೋಪ್ರಾ ಬಂದ 2 ದಿನಗಳ ಬಳಿಕ ಭಾರತಕ್ಕೆ ಬಂದಿಳಿದ ನಿಕ್‌!

Priyanka Chopra: ಗಾಯಕ ನಿಕ್ ಜೋನಾಸ್ ಇಂದು (ಮಾ.18) ಮುಂಬೈಗೆ ತಲುಪಿದ್ದಾರೆ. ವಿಮಾನ ನಿಲ್ದಾಣದಲ್ಲಿ ಇರುವ ನಿಕ್ ಜೋನಾಸ್ ಅವರ ಹಲವಾರು ವಿಡಿಯೊಗಳು ಮತ್ತು ಫೋಟೊಗಳು ವೈರಲ್‌ ಆಗಿವೆ.

VISTARANEWS.COM


on

Nick Jonas arrives in India
ಮಹತ್ವದ, ಕುತೂಹಲಕರ ಸುದ್ದಿಗಾಗಿ ಫಾಲೊ ಮಾಡಿ
Koo

ಮುಂಬೈ: ಪ್ರಿಯಾಂಕಾ ಚೋಪ್ರಾ (Priyanka Chopra) ಮತ್ತು ಅವರ ಮಗಳು ಮಾಲತಿ ಮೇರಿ ಚೋಪ್ರಾ ಜೋನಾಸ್ ಈಗಾಗಲೇ ಭಾರತಕ್ಕೆ ಬಂದಿರುವುದು ಗೊತ್ತೇ ಇದೆ. ಇದೀಗ ಪಿಗ್ಗಿ ಪತಿ ಗಾಯಕ ನಿಕ್ ಜೋನಾಸ್ ಇಂದು (ಮಾ.18) ಮುಂಬೈಗೆ ತಲುಪಿದ್ದಾರೆ. ವಿಮಾನ ನಿಲ್ದಾಣದಲ್ಲಿ ಇರುವ ನಿಕ್ ಜೋನಾಸ್ ಅವರ ಹಲವಾರು ವಿಡಿಯೊಗಳು ಮತ್ತು ಫೋಟೊಗಳು ವೈರಲ್‌ ಆಗಿವೆ.

ಇನ್‌ಸ್ಟಾಗ್ರಾಮ್‌ನಲ್ಲಿ ಅಭಿಮಾನಿಗಳ ಖಾತೆಯಿಂದ ಹಂಚಿಕೊಂಡ ಕ್ಲಿಪ್‌ನಲ್ಲಿ, ನಿಕ್ ಮುಂಬೈ ವಿಮಾನ ನಿಲ್ದಾಣದಿಂದ ಬಿಳಿ ಶರ್ಟ್, ಮ್ಯಾಚಿಂಗ್ ಪ್ಯಾಂಟ್ ಧರಿಸಿ ನಿರ್ಗಮಿಸುತ್ತಿರುವುದು ಕಂಡುಬಂದಿದೆ. ಗಾಯಕ ಮುಗುಳ್ನಕ್ಕು ಪಾಪರಾಜಿಗಳತ್ತ ಕೈ ಬೀಸಿದರು. ನಿಕ್‌ ಕಂಡೊಡನೆ ಅಭಿಮಾನಿಗಳು ವಿಮಾನ ನಿಲ್ದಾಣದ ಹೊರಗೆ ಜಮಾಯಿಸಿದರು. ಇದು ಈ ವರ್ಷ ಭಾರತಕ್ಕೆ ನಿಕ್‌ ಅವರ ಎರಡನೇ ಭೇಟಿಯಾಗಿದೆ. ಇದೀಗ ಫ್ಯಾನ್ಸ್‌ ʻಜೋಡಿ ಭಾರತದಲ್ಲಿ ಹೋಳಿ ಆಚರಿಸಿಲು ಬಂದಿಳಿದಿದೆʼ ಎಂದು ಕಮೆಂಟ್‌ ಮಾಡುತ್ತಿದ್ದಾರೆ. ʻಇದು ಮಾಲತಿಯ ಮೊದಲ ಹೋಳಿʼ ಎಂದು ಇನ್ನೊಬ್ಬರು ಕಮೆಂಟ್‌ ಮಾಡಿದ್ದಾರೆ.

ಪ್ರಿಯಾಂಕಾ ಮತ್ತು ಮಾಲತಿ ಮೇರಿ ಚೋಪ್ರಾ ಜೋನಾಸ್ ಕಳೆದ ವಾರ ಮುಂಬೈಗೆ ಆಗಮಿಸಿದ್ದರು. ಕೆಲವು ದಿನಗಳ ನಂತರ, ನಟಿ ಅಂಬಾನಿ ನಿವಾಸದಲ್ಲಿ ಇಶಾ ಅಂಬಾನಿ ಮತ್ತು ಬಲ್ಗೇರಿಯ ಸಿಇಒ ಜೀನ್ ಕ್ರಿಸ್ಟೋಫ್ ಬಾಬಿನ್ ಆಯೋಜಿಸಿದ್ದ ರೋಮನ್ ಹೋಳಿ ಪಾರ್ಟಿಯಲ್ಲಿ ಭಾಗವಹಿಸಿದರು. ಪ್ರಿಯಾಂಕಾ ಅವರು ಗುಲಾಬಿ ಬಣ್ಣದ ಸ್ಟೈಲಿಶ್ ಸ್ಲಿಟ್ ಸ್ಕರ್ಟ್ ಶೈಲಿಯ ಶೀರ್ ಪ್ರಿ-ಡ್ರೇಪ್ಡ್ ಸೀರೆಯನ್ನು ಧರಿಸಿದ್ದರು.

ಇದನ್ನೂ ಓದಿ: Priyanka Chopra: ‘ಆಸ್ಕರ್ʼ ನಾಮಿನೇಟ್‌ ಆದ ಭಾರತೀಯ ಡಾಕ್ಯುಮೆಂಟರಿಗೆ ಪ್ರಿಯಾಂಕಾ ಚೋಪ್ರಾ ಸಾಥ್‌!

ಸಿನಿಮಾ ವಿಚಾರಕ್ಕೆ ಬಂದರೆ ಪ್ರಿಯಾಂಕಾ ಫ್ರಾಂಕ್ ಇ ಫ್ಲವರ್ಸ್ ನಿರ್ದೇಶಿಸಲಿರುವ ʻದಿ ಬ್ಲಫ್ʼ ಚಿತ್ರದಲ್ಲಿ ಕಾಣಿಸಿಕೊಳ್ಳಲಿದ್ದಾರೆ. ಚಿತ್ರದಲ್ಲಿ ಕಾರ್ಲ್ ಅರ್ಬನ್ ಕೂಡ ನಟಿಸಲಿದ್ದಾರೆ.

ಕ್ಷಣ ಕ್ಷಣದ ಮಾಹಿತಿಗಾಗಿ Vistara News FaceBook ಪೇಜ್ ಫಾಲೋ ಮಾಡಿ
ಮಹತ್ವದ ಮಾಹಿತಿಗಾಗಿ ವಿಸ್ತಾರ ನ್ಯೂಸ್ ಆ್ಯಪ್ ಉಚಿತವಾಗಿ ಡೌನ್ ಲೋಡ್ ಮಾಡಿಕೊಳ್ಳಿ: Andriod App | IOS App
Continue Reading
Click to comment

Leave a Reply

Your email address will not be published. Required fields are marked *

ಬಾಲಿವುಡ್

Janhvi Kapoor: 12ನೇ ವಯಸ್ಸಿನಲ್ಲಿಯೇ ಅಶ್ಲೀಲ ವೆಬ್‌ಸೈಟ್‌ನಲ್ಲಿ ನನ್ನ ಫೋಟೊ ಅಪ್‌ಲೋಡ್‌ ಆಗಿತ್ತು ಎಂದ ಶ್ರೀದೇವಿ ಮಗಳು!

Janhvi Kapoor: ‘ಮಿಸ್ಟರ್ ಆ್ಯಂಡ್‌ ಮಿಸೆಸ್ ಮಹಿ’ 2024 ರ ಟಿ 20 ವಿಶ್ವಕಪ್ ಪ್ರಾರಂಭವಾಗುವ ಕೇವಲ 24 ಗಂಟೆಗಳ ಮೊದಲು ಮೇ 31 ರಂದು ಚಿತ್ರಮಂದಿರಗಳಲ್ಲಿ ಬಿಡುಗಡೆಯಾಗಲಿದೆ. ಸಿನಿಮಾ ಪ್ರಚಾರದ ಸಂದರ್ಶನ ವೇಳೆ ನಟಿ 12 -13 ವರ್ಷ ವಯಸ್ಸಿನಲ್ಲಿರುವಾಗ ಸೋಷಿಯಲ್‌ ಮೀಡಿಯಾದಿಂದಾಗಿ ಲೈಂಗಿಕವಾಗಿ ನಾನು ಸಮಸ್ಯೆ ಎದುರಿಸಿದ್ದೆʼʼಎಂದು ಹೇಳಿಕೊಂಡಿದ್ದಾರೆ.

VISTARANEWS.COM


on

Janhvi Kapoor felt sexualised at the age of 12
Koo

ಬೆಂಗಳೂರು:  ಕ್ರಿಕೆಟ್ ಕತೆಯನ್ನೇ ಮೂಲವಾಗಿಟ್ಟುಕೊಂಡಿರುವ ‘ಮಿಸ್ಟರ್ ಆ್ಯಂಡ್ ಮಿಸೆಸ್ ಮಹಿ’ (Mr. & Mrs. Mahi) ಸಿನಿಮಾವೊಂದು ರೆಡಿಯಾಗುತ್ತಿದೆ. ಆ ಸಿನಿಮಾದಲ್ಲಿ ಬಾಲಿವುಡ್​ ಬ್ಯೂಟಿ ಜಾಹ್ನವಿ ಕಪೂರ್​ (Janhvi Kapoor) ಹಾಗೂ ಪ್ರತಿಭಾವಂತ ನಟ ರಾಜ್​ಕುಮಾರ್ ಕಾಣಿಸಿಕೊಳ್ಳಲಿದ್ದಾರೆ.  ‘ಮಿಸ್ಟರ್ ಆ್ಯಂಡ್‌ ಮಿಸೆಸ್ ಮಹಿ’ 2024 ರ ಟಿ 20 ವಿಶ್ವಕಪ್ ಪ್ರಾರಂಭವಾಗುವ ಕೇವಲ 24 ಗಂಟೆಗಳ ಮೊದಲು ಮೇ 31ರಂದು ಚಿತ್ರಮಂದಿರಗಳಲ್ಲಿ ಬಿಡುಗಡೆಯಾಗಲಿದೆ. ಸಿನಿಮಾ ಪ್ರಚಾರದ ಸಂದರ್ಶನ ವೇಳೆ ನಟಿ 12 -13 ವರ್ಷ ವಯಸ್ಸಿನಲ್ಲಿರುವಾಗ ಸೋಷಿಯಲ್‌ ಮೀಡಿಯಾದಿಂದಾಗಿ ಲೈಂಗಿಕವಾಗಿ ನಾನು ಸಮಸ್ಯೆ ಎದುರಿಸಿದ್ದೆʼʼಎಂದು ಹೇಳಿಕೊಂಡಿದ್ದಾರೆ.

ನಟಿ ಮಾತನಾಡಿ ʻʻನಾನು ಮಾಧ್ಯಮಗಳಿಂದ ಮೊದಲ ಬಾರಿಗೆ ಲೈಂಗಿಕವಾಗಿ ಸಮಸ್ಯೆ ಎದುರಿಸಿದ್ದೆ. ಆಗ ನನಗೆ 12-13 ವರ್ಷ ವಯಸ್ಸು. ಒಮ್ಮೆ ನನ್ನ ತಾಯಿ ಮತ್ತು ತಂದೆಯೊಂದಿಗೆ ಈವೆಂಟ್‌ಗೆ ಹೋಗಿದ್ದೆ. ಆ ಚಿತ್ರಗಳು ಆನ್‌ಲೈನ್‌ನಲ್ಲಿ ವೈರಲ್‌ ಆಗಿದ್ದವು. ಮಾರ್ಫಿಂಗ್ ಮಾಡಿ ಪೋರ್ನ್ ವೆಬ್‌ಸೈಟ್‌ಗಳಲ್ಲಿ ಹಾಕಿದ್ದರು. ಆದರೆ ಇದು ಮಾರ್ಫ್‌ ಮಾಡಿದ ಚಿತ್ರಗಳು ಎಂದು ಹಲವರಿಗೆ ತಿಳಿದೇ ಇರಲಿಲ್ಲ. ನಿಜ ಎಂದು ನಂಬಿದ್ದರು. ಆ ಚಿಕ್ಕ ವಯಸ್ಸಿನಲ್ಲಿಯೇ ನನಗೆ ತುಂಬಾ ಆಘಾತವಾಗಿತ್ತು. ನನ್ನ ಫ್ರೆಂಡ್ಸ್‌ ಕೂಡ ಗೇಲಿ ಮಾಡುತ್ತಿದ್ದರು. ಆ ವಯಸ್ಸಿನಲ್ಲಿ ಏನಾಗುತ್ತಿದೆ ಎಂದು ನನಗೆ ತಿಳಿದೇ ಇರಲಿಲ್ಲʼ ಎಂದಿದ್ದಾರೆ.

ಇದನ್ನೂ ಓದಿ: Kannada New Movie: `ಅನರ್ಥ’ ಸಿನಿಮಾ ಟೀಸರ್‌ ಔಟ್‌!

ಮಿಸ್ಟರ್& ಮಿಸೆಸ್​ ಮಹಿ

ಭಾರತವು ಕ್ರಿಕೆಟ್ ಅನ್ನು ಆರಾಧಿಸುವ ರಾಷ್ಟ್ರವಾಗಿದೆ,. ಕ್ರೀಡಾ ಅಭಿಮಾನಿಗಳಿಗೆ ಕ್ರಿಕೆಟ್ ಧರ್ಮಕ್ಕಿಂತ ಹೆಚ್ಚು. ಎಲ್ಲಾ ವಯಸ್ಸಿನ ಜನರು ವ್ಯಾಪಕವಾಗಿ ಅನುಸರಿಸುವ ಮತ್ತು ಪ್ರೀತಿಸುವ ಕ್ರೀಡೆಯಾಗಿದೆ. ಹೀಗಾಗಿ ಸಿನಿಮಾ ನಿರ್ಮಾಕರು ಅದರ ಬಗ್ಗೆ ಹೆಚ್ಚು ಕಾಳಜಿ ವಹಿಸುತ್ತಾರೆ. ಅದೇ ರೀತಿ ಬಾಲಿವುಡ್ ನಿರ್ದೇಶಕ ಶರಣ್ ಶರ್ಮಾ ಅವರು ನಟರಾದ ಜಾನ್ವಿ ಕಪೂರ್ ಮತ್ತು ರಾಜ್ ಕುಮಾರ್ ರಾವ್ ಅಭಿನಯದ ಕ್ರಿಕೆಟ್ ಆಧಾರಿತ ಚಲನಚಿತ್ರವನ್ನು ನಿರ್ದೇಶಿಸಿದ್ದಾರೆ.

‘ಮಿಸ್ಟರ್ ಆ್ಯಂಡ್‌ ಮಿಸೆಸ್ ಮಹಿ’ ಎಂಬ ಶೀರ್ಷಿಕೆಯ ಈ ಚಲನಚಿತ್ರವು ಕ್ರಿಕೆಟ್ ಕ್ರೀಡೆಯ ಮೇಲಿನ ತಮ್ಮ ಪ್ರೀತಿಯನ್ನು ಅರಸುತ್ತಾ ಹಲವಾರು ಸವಾಲುಗಳು ಮತ್ತು ಅಡೆತಡೆಗಳ ಮೂಲಕ ಎದುರಿಸುವ ಸುಂದರ ಜೋಡಿಯೊಂದರ ಸುತ್ತ ಸುತ್ತುತ್ತದೆ.

ಚಿತ್ರದ ಟ್ರೈಲರ್ ಇನ್ನೂ ಬಿಡುಗಡೆಯಾಗದಿದ್ದರೂ, ಪ್ರಮುಖ ನಟಿ ಜಾಹ್ನವಿ ಕಪೂರ್ ತಮ್ಮ ಇನ್ಸ್ಟಾಗ್ರಾಮ್​​ನಲ್ಲಿ ಚಿತ್ರದ ಬಿಡುಗಡೆಯ ದಿನಾಂಕವನ್ನು ಅನಾವರಣಗೊಳಿಸಿದ್ದಾರೆ. ‘ಮಿಸ್ಟರ್ ಆ್ಯಂಡ್‌ ಮಿಸೆಸ್ ಮಹಿ’ 2024 ರ ಟಿ 20 ವಿಶ್ವಕಪ್ ಪ್ರಾರಂಭವಾಗುವ ಕೇವಲ 24 ಗಂಟೆಗಳ ಮೊದಲು ಮೇ 31 ರಂದು ಚಿತ್ರಮಂದಿರಗಳಲ್ಲಿ ಬಿಡುಗಡೆಯಾಗಲಿದೆ.

ಅಂದ ಹಾಗೆ ಸಿನಿಮಾದ ಬಗ್ಗೆ ಯಾರಿಗೂ ಹೆಚ್ಚಿನ ಮಾಹಿತಿ ಇಲ್ಲ. ಈ ಸಿನಿಮಾ ಧೋನಿಯ ಕತೆಯನ್ನು ಆಧರಿಸಿದ್ದು ಎಂದು ಎಂದು ಹೇಳಲಾಗುತ್ತಿದೆ. ಹೆಸರನ್ನು ಹೇಳುವಾಗ ಮಹೇಂದ್ರ ಸಿಂಗ್ ಧೋನಿಗೆ ಸಂಬಂಧಿಸಿದ ಕತೆ ಎಂದು ಹೇಳಲಾಗುತ್ತಿದೆ. ಆದರೆ, ಅದರ ಬಗ್ಗೆ ಖಚಿತತೆ ಇಲ್ಲ. ಆದರೆ, ಕ್ರಿಕೆಟ್​ ಆಧಾರಿತ ಸಿನಿಮಾ ಎಂಬುದು ಖಾತರಿ. ಹೀಗಾಗಿ ಸಿನಿ ಪ್ರೇಮಿಗಳು ಹಾಗೂ ಕ್ರಿಕೆಟ್ ಪ್ರೇಮಿಗಳನ್ನು ಏಕಕಾಲಕ್ಕೆ ಸೆಳೆಯುವ ಉದ್ದೇಶವನ್ನು ನಿರ್ದೇಶಕರು ಹೊಂದಿದ್ದಾರೆ.

Continue Reading

ಬಾಲಿವುಡ್

Kattappa To Turn Modi: ಮೋದಿ ಪಾತ್ರದಲ್ಲಿ `ಬಾಹುಬಲಿ’ ಕಟ್ಟಪ್ಪ!

Kattappa To Turn Modi: ಪ್ರಧಾನಿ ನರೇಂದ್ರ ಮೋದಿ ಅವರು 2014ರಲ್ಲಿ ಮೊದಲ ಬಾರಿಗೆ ಪ್ರಧಾನಿಯಾದರು. ಆ ಬಳಿಕ ಕೆಲವು ಚಿತ್ರ ನಿರ್ಮಾಪಕರು ಅವರ ಜೀವನಗಾಥೆಯ ಬಗ್ಗೆ ಆಸಕ್ತಿಯನ್ನು ತಳೆದರು. ನಿರ್ದೇಶಕ ಓಮುಂಗ್ ಕುಮಾರ್ ಅವರು ಪ್ರಧಾನಿ ನರೇಂದ್ರ ಮೋದಿ ಅವರ ಕುರಿತು ‘ಪಿಎಂ ನರೇಂದ್ರ ಮೋದಿ(PM Narendra Modi)’ ಸಿನಿಮಾವನ್ನು ಪ್ರಕಟಿಸಿದರು ಮತ್ತು 2019ರಲ್ಲಿ ಈ ಸಿನಿಮಾ ಬಿಡುಗಡೆಯಾಯಿತು. ಪ್ರಧಾನಿ ನೇರಂದ್ರ ಮೋದಿ ಅವರ ಪಾತ್ರದಲ್ಲಿ ನಟ ವಿವೇಕ್ ಒಬೆರಾಯ್ ಅವರು ನಟಿಸಿದ್ದಾರೆ. ವಿವೇಕ್ ತಂದೆ ಸುರೇಶ್ ಒಬೆರಾಯ್ ಅವರು ಚಿತ್ರದ ನಿರ್ಮಾಪಕರ ಪೈಕಿ ಒಬ್ಬರು.

VISTARANEWS.COM


on

Kattappa To Turn Modi Sathyaraj To Play Biopic On Prime Minister
Koo

ಬೆಂಗಳೂರು: ಬ್ಲಾಕ್‌ಬಸ್ಟರ್ `ಬಾಹುಬಲಿ’ ಸಿನಿಮಾದಲ್ಲಿ ಕಟ್ಟಪ್ಪ (Kattappa To Turn Modi) ಪಾತ್ರಕ್ಕೆ ಹೆಸರುವಾಸಿಯಾದ ಹಿರಿಯ ನಟ ಸತ್ಯರಾಜ್ (Veteran actor Sathyaraj) ಅವರು ಪ್ರಧಾನಿ ನರೇಂದ್ರ ಮೋದಿ (Biopic On Prime Minister) ಅವರ ಪಾತ್ರದಲ್ಲಿ ಕಾಣಿಸಿಕೊಳ್ಳಲು ಸಿದ್ಧರಾಗಿದ್ದಾರೆ. ಪಾತ್ರವನ್ನು ಸಿನಿಮಾ ತಜ್ಞ ರಮೇಶ್ ಬಾಲಾ ಸಾಮಾಜಿಕ ಮಾಧ್ಯಮದಲ್ಲಿ ಈ ಬಗ್ಗೆ ಪೋಸ್ಟ್ ಹಂಚಿಕೊಂಡಿದ್ದಾರೆ.

ಪ್ರಧಾನಿ ಮೋದಿಯವರ ಜೀವನ ತೆರೆ ಮೇಲೆ ಬಂದಿರುವುದು ಇದೇನು ಮೊದಲಲ್ಲ. 2019 ರಲ್ಲಿ, ನಟ ವಿವೇಕ್ ಒಬೆರಾಯ್, ಓಮಂಗ್ ಕುಮಾರ್ ನಿರ್ದೇಶಿಸಿದ ಜೀವನಚರಿತ್ರೆಯ ಚಿತ್ರದಲ್ಲಿ ಕಂಡು ಬಂದಿದ್ದರು. ಇದಲ್ಲದೆ, ಮಹೇಶ್ ಠಾಕೂರ್, ಲಾಲ್ಜಿ ಡಿಯೋರಿಯಾ, ರಜಿತ್ ಕಪೂರ್ ಮತ್ತು ಕೆಕೆ ಶುಕ್ಲಾ ಅವರಂತಹ ಇತರ ನಟರು ಮೋದಿ ಕುರಿತು ಸಿನಿಮಾ ಮಾಡಿದ್ದಾರೆ. ಮೋದಿ ಪಾತ್ರದಲ್ಲಿ ಸತ್ಯರಾಜ್​ ಕಾಣಿಸಿಕೊಳ್ಳಲಿದ್ದಾರೆ ಎಂಬುದು ದಕ್ಷಿಣ ಭಾರತದ ಹಿರಿಯ ನಟನ ಬಗ್ಗೆ ಹೆಚ್ಚುತ್ತಿರುವ ಜನಪ್ರಿಯತೆಯನ್ನೂ ತೋರಿಸುತ್ತದೆ.

ಪ್ರಧಾನಿ ನರೇಂದ್ರ ಮೋದಿ ಅವರು 2014ರಲ್ಲಿ ಮೊದಲ ಬಾರಿಗೆ ಪ್ರಧಾನಿಯಾದರು. ಆ ಬಳಿಕ ಕೆಲವು ಚಿತ್ರ ನಿರ್ಮಾಪಕರು ಅವರ ಜೀವನಗಾಥೆಯ ಬಗ್ಗೆ ಆಸಕ್ತಿಯನ್ನು ತಳೆದರು. ನಿರ್ದೇಶಕ ಓಮುಂಗ್ ಕುಮಾರ್ ಅವರು ಪ್ರಧಾನಿ ನರೇಂದ್ರ ಮೋದಿ ಅವರ ಕುರಿತು ‘ಪಿಎಂ ನರೇಂದ್ರ ಮೋದಿ(PM Narendra Modi)’ ಸಿನಿಮಾವನ್ನು ಪ್ರಕಟಿಸಿದರು ಮತ್ತು 2019ರಲ್ಲಿ ಈ ಸಿನಿಮಾ ಬಿಡುಗಡೆಯಾಯಿತು. ಪ್ರಧಾನಿ ನೇರಂದ್ರ ಮೋದಿ ಅವರ ಪಾತ್ರದಲ್ಲಿ ನಟ ವಿವೇಕ್ ಒಬೆರಾಯ್ ಅವರು ನಟಿಸಿದ್ದಾರೆ. ವಿವೇಕ್ ತಂದೆ ಸುರೇಶ್ ಒಬೆರಾಯ್ ಅವರು ಚಿತ್ರದ ನಿರ್ಮಾಪಕರ ಪೈಕಿ ಒಬ್ಬರು.

ಇದನ್ನೂ ಓದಿ: Actor Sathyaraj: `ಬಾಹುಬಲಿ’ ಕಟ್ಟಪ್ಪನ ತೊಡೆ ಮೇಲೆ ಕುಳಿತ ಈ ಕ್ಯೂಟ್‌ ನಟ ಯಾರು? ಹೇಳಿ ನೋಡೋಣ!

ಭಾರೀ ವಿವಾದವಾಗಿತ್ತು

2019ರ ಏಪ್ರಿಲ್- ಮೇ ತಿಂಗಳಲ್ಲಿ ಲೋಕಸಭೆ ಚುನಾವಣೆ ನಿಗದಿಯಾಗಿತ್ತು. ಚುನಾವಣೆಯ ಕಾವು ಜೋರಾಗಿತ್ತು. ಇದೇ ಸಂದರ್ಭದಲ್ಲಿ ನಿರ್ಮಾಪಕರು ಪಿಎಂ ನರೇಂದ್ರ ಮೋದಿ ಸಿನಿಮಾ ಬಿಡುಗಡೆಗೆ ಮುಂದಾದರು. ಇದು ಆಡಳಿತ ಮತ್ತು ಪ್ರತಿಪಕ್ಷಗಳ ನಾಯಕರ ಮಧ್ಯೆ ಒಣ ರಗಳೆಗೂ ಕಾರಣವಾಯಿತು. ಪಿಎಂ ನರೇಂದ್ರ ಮೋದಿ ಸಿನಿಮಾ ಮತದಾರರಿಗೆ ಆಮಿಷ ಒಡ್ಡಬಹುದು ಎಂಬ ಆರೋಪ ಕೇಳಿ ಬಂತು. ಹಾಗಾಗಿ ಚುನಾವಣೆ ನಡೆಯುವ ಸಂದರ್ಭದಲ್ಲಿ ಸಿನಿಮಾಗೆ ಬಿಡುಗಡೆಯ ಭಾಗ್ಯ ಸಿಗಲಿಲ್ಲ. ಫಲಿತಾಂಶ ಪ್ರಕಟವಾದ ಮಾರನೇ ದಿನ ಅಂದರೆ 2019 ಮೇ 24ರಂದು ಸಿನಿಮಾ ಬಿಡುಗಡೆಯಾಯಿತು.

ಬಿಡುಗಡೆ ಮುನ್ನ ಭಾರೀ ಸದ್ದಿಗೆ ಕಾರಣವಾಗಿದ್ದ ಪಿಎಂ ನರೇಂದ್ರ ಮೋದಿ ಸಿನಿಮಾ, ಬಿಡುಗಡೆಯ ಬಳಿಕ ಅಷ್ಟೇನೂ ಸದ್ದು ಮಾಡಲಿಲ್ಲ. ವಿಮರ್ಶಕರು ಮತ್ತು ಪ್ರೇಕ್ಷಕರಿಂದ ಮೆಚ್ಚುಗೆಯೂ ಸಿಗಲಿಲ್ಲ. 8 ಕೋಟಿ ರೂಪಾಯಿ ವೆಚ್ಚದಲ್ಲಿ ನಿರ್ಮಾಣವಾದ ಈ ಹಿಂದಿ ಭಾಷೆಯ ಚಿತ್ರವು ತನ್ನ ಲೈಫ್‌ ಟೈಮ್‌ನಲ್ಲಿ 28 ಕೋಟಿ ರೂ. ಗಳಿಕೆ ಮಾಡಿತ್ತು.

ಸ್ಫೂರ್ತಿಯಾದರು ಮೋದಿ

ಬಹುಶಃ ಸಂಪೂರ್ಣವಾಗಿ ಮೋದಿ ಅವರನ್ನು ಕೇಂದ್ರವಾಗಿಟ್ಟು ಈವರೆಗೆ ಅಷ್ಟೇನೂ ಚಿತ್ರಗಳ ಬಂದಿಲ್ಲ. ಆದರೆ, ಕೆಲವು ಸಿನಿಮಾಗಳಿಗೆ ಅವರು ಸ್ಫೂರ್ತಿಯಾಗಿದ್ದಾರೆ. ಕೆಲವು ಪಾತ್ರಗಳನ್ನು ಅವರನ್ನು ಹೋಲುತ್ತವೆ. ಹಾಗಾಗಿ, ಮೋದಿ ಅವರಿಗೂ ಸಿನಿಮಾ ರಂಗಕ್ಕೂ ನಂಟಿದೆ ಎದು ಹೇಳಬಹುದು.

Continue Reading

ಬಾಲಿವುಡ್

Cannes 2024: ಆಸ್ಕರ್‌ ಪ್ರಶಸ್ತಿಯ ಆಕಾರದಂತೆ ಕಂಡ ಶೋಭಿತಾ ಧೂಲಿಪಾಲ!

Cannes 2024: ಪ್ರತಿ ವರ್ಷದಂತೆ ಈ ಬಾರಿಯೂ ಕಾನ್‌ ಚಲನಚಿತ್ರೋತ್ಸವದಲ್ಲಿ ಭಾರತೀಯ ಸೆಲೆಬ್ರಿಟಿಗಳ ಉಪಸ್ಥಿತಿ ಕಂಡುಬಂದಿದೆ. ಈ ಕಾರ್ಯಕ್ರಮದಲ್ಲಿ ಐಶ್ವರ್ಯಾ ರೈ ಮತ್ತು ಕಿಯಾರಾ ಆಡ್ವಾಣಿ ಕೂಡ ಭಾಗವಹಿಸಿದ್ದರು. ಅದಿತಿ ರಾವ್ ಹೈದರಿ ಕೂಡ ಸಮಾರಂಭದಲ್ಲಿ ಕಾಣಿಸಿಕೊಳ್ಳಲಿದ್ದಾರೆ. ಮೇ 25ಕ್ಕೆ ಚಿತ್ರೋತ್ಸವ ಮುಕ್ತಾಯವಾಗಲಿದೆ.ಶೋಭಿತಾ ಧೂಲಿಪಾಲ ಅವರು ಗೋಲ್ಡನ್ ಬಾಡಿಕಾನ್ ಫುಲ್ ಸ್ಲೀವ್ ಡ್ರೆಸ್‌ನಲ್ಲಿ ಮಿಂಚಿದ್ದಾರೆ. ಇದೀಗ ಈ ಫೋಟೊಗಳು ಸೋಷಿಯಲ್‌ ಮೀಡಿಯಾದಲ್ಲಿ ವೈರಲ್‌ ಆಗಿದೆ.

VISTARANEWS.COM


on

Sobhita Dhulipala golden new look from Cannes Film Festival
Koo

ಬೆಂಗಳೂರು: 77ನೇ  ಕಾನ್‌ ಫಿಲ್ಮ್‌ ಫೆಸ್ಟಿವಲ್‌ (Cannes 2024)ನಲ್ಲಿ ಶೋಭಿತಾ ಧೂಲಿಪಾಲ ( Sobhita Dhulipala) ಅವರು ರೆಡ್‌ ಕಾರ್ಪೆಟ್‌ ಮೇಲೆ ಹೆಜ್ಜೆ ಹಾಕಿದ್ದಾರೆ. ಶೋಭಿತಾ ಧೂಲಿಪಾಲ ಅವರು ಗೋಲ್ಡನ್ ಬಾಡಿಕಾನ್ ಫುಲ್ ಸ್ಲೀವ್ ಡ್ರೆಸ್‌ನಲ್ಲಿ ಮಿಂಚಿದ್ದಾರೆ. ಇದೀಗ ಈ ಫೋಟೊಗಳು ಸೋಷಿಯಲ್‌ ಮೀಡಿಯಾದಲ್ಲಿ ವೈರಲ್‌ ಆಗಿದೆ.

ಶೋಭಿತಾ ಅವರು ಗೋಲ್ಡನ್ ಬಾಡಿಕಾನ್ ಫುಲ್ ಸ್ಲೀವ್ ಡ್ರೆಸ್ ಆಯ್ಕೆ ಮಾಡಿಕೊಂಡರು. ಚೆಂದದ ಕಿವಿಯೋಲೆ, ಕೂದಲನ್ನು ಬನ್‌ ಕಟ್ಟಿದಳು ಹೀಲ್ಸ್ ಧರಿಸಿದ್ದರು. ಫೋಟೋಗಳನ್ನು ಹಂಚಿಕೊಂಡಿರುವ ಶೋಭಿತಾ ಧೂಲಿಪಾಲ “ಕಾನ್‌ನಲ್ಲಿರುವ ಗಿಲ್ಡೆಡ್ ಡ್ರ್ಯಾಗನ್‌ನಂತೆ ಸುತ್ತಾಡಿದೆ” ಎಂದು ಪೋಸ್ಟ್‌ಗೆ ಶೀರ್ಷಿಕೆ ನೀಡಿದ್ದಾರೆ. ಚಿತ್ರಗಳಿಗೆ ಪ್ರತಿಕ್ರಿಯಿಸಿದ ಅಭಿಮಾನಿಯೊಬ್ಬರು, “ನೀವು ಅದ್ಭುತವಾಗಿ ಕಾಣುತ್ತೀರಿ ಎಂದು ಹೇಳಲು ನನ್ನ ಬಳಿ ಪದಗಳಿಲ್ಲ” ಎಂದು ಬರೆದಿದ್ದಾರೆ. ಮತ್ತೊಬ್ಬರು ʻʻಆಸ್ಕರ್‌ ಪ್ರಶಸ್ತಿಯಂತೆ ಕಾಣುತ್ತಿದ್ದಾರೆʼʼ ಎಂದು ಕಮೆಂಟ್‌ ಮಾಡಿದ್ದಾರೆ.

ಶುಕ್ರವಾರ ನಡೆದ ಕಾರ್ಯಕ್ರಮದಲ್ಲಿ ಶೋಭಿತಾ ಮಿನುಗುವ ನೇರಳೆ ಬಣ್ಣದ ಬಟ್ಟೆ ಮತ್ತು ಹೀಲ್ಸ್ ಧರಿಸಿದ್ದರು. 1.8 ಲಕ್ಷ ರೂ. ಮೌಲ್ಯದ ಕಾರ್ಡೆಲಿಯಾ ಜಂಪ್‌ಸೂಟ್ ಅನ್ನು ನಮ್ರತಾ ಜೋಶಿಪುರ ವಿನ್ಯಾಸಗೊಳಿಸಿದ್ದರು ಈವೆಂಟ್‌ನಲ್ಲಿ ಶೋಭಿತಾ ಪ್ರೀಮಿಯಂ ಐಸ್ ಕ್ರೀಮ್ ಬ್ರಾಂಡ್ ಮ್ಯಾಗ್ನಮ್ ಇಂಡಿಯಾವನ್ನು ಪ್ರತಿನಿಧಿಸುತ್ತಿದ್ದಾರೆ.

ಪ್ರತಿ ವರ್ಷದಂತೆ ಈ ಬಾರಿಯೂ ಕಾನ್‌ ಚಲನಚಿತ್ರೋತ್ಸವದಲ್ಲಿ ಭಾರತೀಯ ಸೆಲೆಬ್ರಿಟಿಗಳ ಉಪಸ್ಥಿತಿ ಕಂಡುಬಂದಿದೆ. ಈ ಕಾರ್ಯಕ್ರಮದಲ್ಲಿ ಐಶ್ವರ್ಯಾ ರೈ ಮತ್ತು ಕಿಯಾರಾ ಆಡ್ವಾಣಿ ಕೂಡ ಭಾಗವಹಿಸಿದ್ದರು. ಅದಿತಿ ರಾವ್ ಹೈದರಿ ಕೂಡ ಸಮಾರಂಭದಲ್ಲಿ ಕಾಣಿಸಿಕೊಳ್ಳಲಿದ್ದಾರೆ. ಮೇ 25ಕ್ಕೆ ಚಿತ್ರೋತ್ಸವ ಮುಕ್ತಾಯವಾಗಲಿದೆ.

ಶೋಭಿತಾ ಪ್ರಸ್ತುತ ದೇವ್ ಪಟೇಲ್ ನಿರ್ದೇಶನದ ʻಮಂಕಿ ಮ್ಯಾನ್ʼ ಚಿತ್ರದಲ್ಲಿನ ಅಭಿನಯಕ್ಕಾಗಿ ಪ್ರಶಂಸೆ ಪಡೆಯುತ್ತಿದ್ದಾರೆ. ಇದರಲ್ಲಿ ದೇವ್, ಸಿಕಂದರ್ ಖೇರ್, ಶಾರ್ಲ್ಟೋ ಕಾಪ್ಲೆ, ಮಕರಂದ್ ದೇಶಪಾಂಡೆ, ಅಶ್ವಿನಿ ಕಲ್ಸೇಕರ್ ಮತ್ತು ಇತರರು ನಟಿಸಿದ್ದಾರೆ.

ಇದನ್ನೂ ಓದಿ: Cannes 2024: 20 ಕೆಜಿ ತೂಕದ ಗೌನ್ ಧರಿಸಿ ಬೆರಗುಗೊಳಿಸಿದ ನ್ಯಾನ್ಸಿ ತ್ಯಾಗಿ!

ನಟಿ ಶೋಭಿತಾ ಜತೆ ನಾಗ ಚೈತನ್ಯ ಡೇಟಿಂಗ್

ನಟಿ ಸಮಂತಾ (samantha) ಮಾಜಿ ಪತಿ ನಟ ನಾಗ ಚೈತನ್ಯ (Naga Chaitanya) ಎರಡನೇ ಮದುವೆಯಾಗಲು ಮುಂದಾಗಿದ್ದಾರೆ ಎಂಬ ಸುದ್ದಿ ಕೆಲವು ದಿನಗಳಿಂದ ಹರಿದಾಡುತ್ತಿದೆ. ನಟ ಈ ಬಗ್ಗೆ ಯಾವುದೇ ಮಾಹಿತಿ ಹಂಚಿಕೊಂಡಿಲ್ಲ. ಆದರೂ ನಾಗ ಚೈತನ್ಯ ತಂದೆ ನಾಗುರ್ಜನ ಮಗನ ಎರಡನೇ ಮದುವೆಗೆ ತಯಾರಿ ಮಾಡುತ್ತಿದ್ದಾರೆ ಎಂದು ವರದಿಯಾಗಿತ್ತು. ಅಷ್ಟೇ ಅಲ್ಲದೇ ನಾಗ ಚೈತನ್ಯ ಮದುವೆ ಮಾಡಲು ಅಕ್ಕಿನೇನಿ ನಾಗಾರ್ಜುನ ಅವರು ಆಸಕ್ತಿ ತೋರಿ ನಾಗ ಚೈತನ್ಯಗೆ ಉದ್ಯಮಿ ಕುಟುಂಬದಿಂದ ಹೆಣ್ಣನ್ನು ತರಲು ಸಿದ್ಧತೆ ನಡೆದಿದ್ದು, ಈ ವರ್ಷವೇ ವಿವಾಹ ನಡೆಯಲಿದೆ ಎಂದು ತೆಲುಗು ಮಾಧ್ಯಮಗಳು ವರದಿ ಮಾಡಿವೆ. ಆದರೆ, ಈ ವಿಚಾರದಲ್ಲಿ ಯಾವುದೇ ಅಧಿಕೃತ ಮಾಹಿತಿ ಹೊರ ಬಿದ್ದಿಲ್ಲ. ಇದೀಗ ಮೂಲಗಳ ಪ್ರಕಾರ ಇದ್ಯಾವುದೂ ಸತ್ಯವಲ್ಲ. ನಾಗ ಚೈತನ್ಯ ಗೆಳತಿಯೂ ಆದ ನಟಿ ಶೋಭಿತಾ ಧೂಳಿಪಾಲ (shobhita dhulipala) ಜತೆ ನಟ ಡೇಟಿಂಗ್‌ ಮಾಡುತ್ತಿದ್ದಾರೆ ಎನ್ನಲಾಗಿದೆ.

Continue Reading

ಬಾಲಿವುಡ್

Aishwarya Rai:   ಕಾನ್‌ ಫಿಲ್ಮ್‌ ಫೆಸ್ಟಿವಲ್‌ ಮುಗಿದ ಬಳಿಕ ಐಶ್ವರ್ಯಾ ರೈ ಕೈಗೆ ಶಸ್ತ್ರ ಚಿಕಿತ್ಸೆ

Aishwarya Rai:   ಮೊದಲ ದಿನ ಐಶ್ವರ್ಯಾ ಫಲ್ಗುಣಿ ಶೇನ್ ಪೀಕಾಕ್ ಗೌನ್ (Falguni Shane Peacock creation ) ಧರಿಸಿದ್ದರು. ವಿಶೇಷ ಏನೆಂದರೆ, ಕೈಗೆ ಬ್ಯಾಂಡೇಜ್​ ಸುತ್ತಿಕೊಂಡೇ ಅವರು ರೆಡ್​ ಕಾರ್ಪೆಟ್​ನಲ್ಲಿ (Cannes Red Carpet) ನಡೆದು ಬಂದಿದ್ದರು. ಐಶ್ವರ್ಯಾ ರೈ ಅವರು ಎರಡನೇ ಬಾರಿ ಬೆಳ್ಳಿ ಮತ್ತು ನೀಲಿ ಮಿಶ್ರಿತ ಗೌನ್ ಧರಿಸಿದ್ದರು. ಫಲ್ಗುಣಿ ಮತ್ತು ಶೇನ್ ಪೀಕಾಕ್ ವಿನ್ಯಾಸಗೊಳಿಸಿದ ಸ್ಕರ್ಟ್ ಇದಾಗಿತ್ತು. ‌ ಆದರೆ ಈ ಸ್ಕರ್ಟ್‌ ಬಗ್ಗೆ ಅನೇಕರು ಟೀಕೆ ಮಾಡಿದ್ದರು.

VISTARANEWS.COM


on

Aishwarya Rai undergo surgery post her return from Cannes Film Festival
Koo

ಬೆಂಗಳೂರು: ಐಶ್ವರ್ಯಾ ರೈ ಬಚ್ಚನ್ (Aishwarya Rai) ಅವರು 77ನೇ ಕಾನ್‌ ಫಿಲ್ಮ್‌ ಫೆಸ್ಟಿವಲ್‌ನಲ್ಲಿ (77th Cannes Film Festival) ಎರಡು ಶೇಡ್‌ನಲ್ಲಿ ಕಂಡಿದ್ದಾರೆ. ಕೈಗೆ ಬ್ಯಾಂಡೇಜ್‌ ಸುತ್ತಿಕೊಂಡಿದ್ದರೂ ನಟಿ ಸಖತ್‌ ಆಗಿಯೇ ಪೋಸ್‌ ಕೊಟ್ಟರು. ಈಗ ಸಿಕ್ಕಿರುವ ಮಾಹಿತಿ ಏನೆಂದರೆ, ಭಾರತಕ್ಕೆ ವಾಪಸ್​ ಆಗುತ್ತಿದ್ದಂತೆಯೇ ಐಶ್ವರ್ಯಾ ರೈ (Aishwarya Rai) ಅವರ ಕೈಗೆ ಶಸ್ತ್ರ ಚಿಕಿತ್ಸೆ ಮಾಡಲಾಗುತ್ತದೆ ಅಂತೆ.

ಮೂಲಗಳ ಪ್ರಕಾರ ಕೆಲವೇ ದಿನಗಳ ಹಿಂದೆ ಐಶ್ವರ್ಯಾ ರೈ ಬಚ್ಚನ್​ ಅವರ ಮಣಿಕಟ್ಟಿಗೆ ಪೆಟ್ಟಾಗಿತ್ತು. ನೋವು ಇದ್ದಿದ್ದರಿಂದ ಈ ಬಾರಿ ಕಾನ್​ ಫಿಲ್ಮ್​ ಫೆಸ್ಟಿವಲ್​ಗೆ ತೆರಳುವುದು ಬೇಡ ಎಂದು ಆಪ್ತರು ಸಲಹೆ ಕೂಡ ನೀಡಿದ್ದರು. ಆದರೆ ಅದಕ್ಕೆ ಐಶ್ವರ್ಯಾ ರೈ ಒಪ್ಪಲಿಲ್ಲ. ಈ ಬಾರಿ ನಟಿ ಕೈಗೆ ಬ್ಯಾಂಡೇಜ್​ ಹಾಕಿಸಿಕೊಂಡೇ ಅವರು ರೆಡ್​ ಕಾರ್ಪೆಟ್​ನಲ್ಲಿ ಪೋಸ್​ ನೀಡಿದರು. ಮುಂದಿನ ವಾರ ನಟಿ ಶಸ್ತ್ರಚಿಕಿತ್ಸೆಗೆ ಒಳಗಾಗಲಿದ್ದಾರೆ ಎನ್ನಲಾಗಿದೆ. ಮಗಳು ಆರಾಧ್ಯ ಬಚ್ಚನ್ ಜತೆ ಈ ಬಾರಿ ಐಶ್ವರ್ಯಾ ರೈ ಚಲನಚಿತ್ರೋತ್ಸವಕ್ಕೆ ಹೋಗಿದ್ದರು.

ಮೊದಲ ದಿನ ಐಶ್ವರ್ಯಾ ಫಲ್ಗುಣಿ ಶೇನ್ ಪೀಕಾಕ್ ಗೌನ್ (Falguni Shane Peacock creation ) ಧರಿಸಿದ್ದರು. ವಿಶೇಷ ಏನೆಂದರೆ, ಕೈಗೆ ಬ್ಯಾಂಡೇಜ್​ ಸುತ್ತಿಕೊಂಡೇ ಅವರು ರೆಡ್​ ಕಾರ್ಪೆಟ್​ನಲ್ಲಿ (Cannes Red Carpet) ನಡೆದು ಬಂದಿದ್ದರು. ಐಶ್ವರ್ಯಾ ರೈ ಅವರು ಎರಡನೇ ಬಾರಿ ಬೆಳ್ಳಿ ಮತ್ತು ನೀಲಿ ಮಿಶ್ರಿತ ಗೌನ್ ಧರಿಸಿದ್ದರು. ಫಲ್ಗುಣಿ ಮತ್ತು ಶೇನ್ ಪೀಕಾಕ್ ವಿನ್ಯಾಸಗೊಳಿಸಿದ ಸ್ಕರ್ಟ್ ಇದಾಗಿತ್ತು. ‌ ಆದರೆ ಈ ಸ್ಕರ್ಟ್‌ ಬಗ್ಗೆ ಅನೇಕರು ಟೀಕೆ ಮಾಡಿದ್ದರು. ಫಲ್ಗುಣಿ ಮತ್ತು ಶೇನ್ ಪೀಕಾಕ್ ಅವರು ಫ್ರಾನ್ಸಿಸ್ ಫೋರ್ಡ್ ಕೊಪ್ಪೊಲಾ ಅವರ “ಮೆಗಾಲೋಪೊಲಿಸ್” ನ ಪ್ರಥಮ ಪ್ರದರ್ಶನಕ್ಕಾಗಿ ಉಡುಪನ್ನು ವಿನ್ಯಾಸಗೊಳಿಸಿದ್ದರು. ಆದರೆ ಈ ಗೌನ್‌ ಬಗ್ಗೆ ಮಿಶ್ರ ಪ್ರತಿಕ್ರಿಯೆ ವ್ಯಕ್ತವಾಗಿತ್ತು. ಒಬ್ಬರು ʻʻಈ ಗೌನ್‌ನಲ್ಲಿ ತುಂಬ ಚೆಂದ ಕಾಣುತ್ತೀರಿ. ಆದರೆ ಇದು ಕಾನ್‌ ಉತ್ಸವಕ್ಕೆ ಸರಿ ಹೊಂದುವಂತಿಲ್ಲʼʼ ಎಂದು ಕಮೆಂಟ್‌ ಮಾಡಿದ್ದರು. ಇನ್ನೊಬ್ಬರು ʻʻಬರ್ತ್‌ಡೇ ಪಾರ್ಟಿ ಇಂದ ಪ್ರಭಾವಿತರಾದರೇ? ನಿಮ್ಮ ಸ್ಟೈಲಿಶ್‌ರನ್ನು ಮೊದಲು ಕೆಲಸದಿಂದ ಕಿತ್ತು ಹಾಕಿʼʼ ಎಂದು ಕಮೆಂಟ್‌ ಮಾಡಿದ್ದರು.

ಇದನ್ನೂ ಓದಿ: Aishwarya Rai : ಐಶ್ವರ್ಯಾ ರೈ ಸ್ಟೈಲಿಶ್‌ರನ್ನು ವಜಾ ಮಾಡಿ ಎಂದ ನೆಟ್ಟಿಗರು! ಯಾಕಿಷ್ಟು ಆಕ್ರೋಶ?

2002ರ ಕಾನ್ ಫಿಲ್ಮ್ ಫೆಸ್ಟಿವಲ್‌ನಲ್ಲಿ ಐಶ್ವರ್ಯಾ ರೈ ಅವರು ಕೆಂಪು ಕಾರ್ಪೆಟ್‌ನಲ್ಲಿ ಭಾರೀ ಚಿನ್ನದ ಆಭರಣಗಳೊಂದಿಗೆ ನೀತಾ ಲುಲ್ಲಾ ಸೀರೆಯಲ್ಲಿ ಕಾಣಿಸಿಕೊಂಡಿದ್ದರು. ಆ ವರ್ಷ ನಟ ಶಾರುಖ್ ಖಾನ್ ಮತ್ತು ನಿರ್ದೇಶಕ ಸಂಜಯ್ ಲೀಲಾ ಬನ್ಸಾಲಿ ಅವರೊಂದಿಗೆ ಉಪಸ್ಥಿತರಿದ್ದರು. ಅಂದಿನಿಂದ, ನಟಿ ಬಹುತೇಕ ಪ್ರತಿ ವರ್ಷ ಕಾನ್ ಫಿಲ್ಮ್ ಫೆಸ್ಟಿವಲ್‌ನಲ್ಲಿ ಭಾಗಿಯಾಗುತ್ತಿದ್ದಾರೆ . ಲೋರಿಯಲ್ ಪ್ಯಾರಿಸ್‌ನ ಬ್ರ್ಯಾಂಡ್‌ ಅಂಬಾಸಿಡರ್‌ಗಳಲ್ಲಿ ಒಬ್ಬರಾಗಿ ಅವರು ಮತ್ತೊಮ್ಮೆ ಕಾನ್ ಫಿಲ್ಮ್ ಫೆಸ್ಟಿವಲ್‌ನಲ್ಲಿ ಭಾಗಿಯಾಗುತ್ತಿದ್ದಾರೆ.

Continue Reading
Advertisement
Prajwal Revanna Case
ಕರ್ನಾಟಕ2 mins ago

Prajwal Revanna Case: ಪೆನ್‌ಡ್ರೈವ್‌ ಕೇಸ್‌ಗೆ ಟ್ವಿಸ್ಟ್;‌ ದೇವರಾಜೇಗೌಡ, ಡಿಕೆಶಿ ಆಡಿಯೊ ಬಯಲು, ಇಲ್ಲಿದೆ ಸ್ಫೋಟಕ ಮಾಹಿತಿ

Money Guide
ಮನಿ-ಗೈಡ್11 mins ago

Money Guide: ಪ್ಯಾನ್‌ ಕಾರ್ಡ್‌ ಇಲ್ಲದೆಯೂ ಸಿಬಿಲ್‌ ಸ್ಕೋರ್‌ ಪರಿಶೀಲಿಸಬೇಕೆ? ಈ ಟಿಪ್ಸ್‌ ಫಾಲೋ ಮಾಡಿ

Road Accident
ಕ್ರೈಂ15 mins ago

Road Accident: ಬೆಂಗಳೂರು, ಗದಗದಲ್ಲಿ ಸರಣಿ ಅಪಘಾತ; ಗ್ಯಾಸ್ ಟ್ಯಾಂಕರ್ ಸ್ಫೋಟಕ್ಕೆ ಮನೆಗಳೇ ಭಸ್ಮ

Janhvi Kapoor felt sexualised at the age of 12
ಬಾಲಿವುಡ್21 mins ago

Janhvi Kapoor: 12ನೇ ವಯಸ್ಸಿನಲ್ಲಿಯೇ ಅಶ್ಲೀಲ ವೆಬ್‌ಸೈಟ್‌ನಲ್ಲಿ ನನ್ನ ಫೋಟೊ ಅಪ್‌ಲೋಡ್‌ ಆಗಿತ್ತು ಎಂದ ಶ್ರೀದೇವಿ ಮಗಳು!

Kundapur News
ಕರ್ನಾಟಕ29 mins ago

Kundapur News: ಅನಾರೋಗ್ಯದಿಂದ ತಾಯಿ ಸಾವು, ಶವದ ಜತೆ 4 ದಿನ ಕಳೆದ ಬುದ್ಧಿಮಾಂದ್ಯ ಪುತ್ರಿಯೂ ಮೃತ್ಯು!

RCB vs CSK
ಕ್ರಿಕೆಟ್42 mins ago

RCB vs CSK: ಧೋನಿ ವರ್ತನೆಗೆ ‘ಇಟ್‌ ಹರ್ಟ್ಸ್‌​’ ಎಂದ ಆರ್​ಸಿಬಿ ಅಭಿಮಾನಿಗಳು; ಧೋನಿ ಮಾಡಿದ ತಪ್ಪೇನು?

Congress Manifesto
ದೇಶ44 mins ago

Congress Manifesto: ಕಾಂಗ್ರೆಸ್‌ ಪ್ರಣಾಳಿಕೆ ಬಗ್ಗೆ ಅಪಪ್ರಚಾರ; ವ್ಯಕ್ತಿ ಅರೆಸ್ಟ್‌-ಬಿಜೆಪಿ ಕಿಡಿ

Prajwal Revanna Case
ಕರ್ನಾಟಕ55 mins ago

Prajwal Revanna Case: ಡಿಕೆಶಿ 100 ಕೋಟಿ ರೂ. ಆಫರ್;‌ ಬೆಂಕಿ ಇಲ್ಲದೆ ಹೊಗೆಯಾಡಲ್ಲ ಎಂದ ಆರ್.‌ ಅಶೋಕ್

Karnataka Rain
ಮಳೆ58 mins ago

Karnataka Rain : ಒಂದೇ ಮಳೆಗೆ ಹೊಳೆಯಂತಾದ ಬೆಂಗಳೂರು ರಸ್ತೆಗಳು! ಕಳಸದಲ್ಲೂ ಮುಂದುವರಿದ ಅಬ್ಬರ

FSSAI alert
ಆರೋಗ್ಯ1 hour ago

FSSAI Warning: ನೀವು ತಿನ್ನುವ ಮಾವಿನ ಹಣ್ಣು ಸುರಕ್ಷಿತವಾಗಿದೆಯೇ?

Sharmitha Gowda in bikini
ಕಿರುತೆರೆ8 months ago

Geetha Serial Kannada: ನಿದ್ದೆ ಕದ್ದ ಚೋರಿ! ನಟಿ `ಭಾನುಮತಿ’ ಹಾಟ್‌ ಪೋಟೊಗಳಿಗೆ ಫ್ಯಾನ್ಸ್ ಫುಲ್ ಫಿದಾ

Kannada Serials
ಕಿರುತೆರೆ7 months ago

Kannada Serials TRP: 2ನೇ ಸ್ಥಾನದಲ್ಲಿ 2 ಧಾರಾವಾಹಿಗಳು; ಟಿಆರ್‌ಪಿ ರೇಸ್‌ನಲ್ಲಿಲ್ಲ ಭಾಗ್ಯಲಕ್ಷ್ಮೀ!

Bigg Boss- Saregamapa 20 average TRP
ಕಿರುತೆರೆ7 months ago

Kannada Serials TRP: ಏಳನೇ ಸ್ಥಾನಕ್ಕೆ ʻಅಮೃತಧಾರೆʼ ಕುಸಿತ; ಬಿಗ್‌ ಬಾಸ್‌-ಸರಿಗಮಪ ಟಿಆರ್‌ಪಿ ಎಷ್ಟು?

galipata neetu
ಕಿರುತೆರೆ6 months ago

Kanyadana Serial: ಕಿರುತೆರೆಗೆ ಮತ್ತೆ ಎಂಟ್ರಿ ಕೊಟ್ಟ ʻಗಾಳಿಪಟʼ ಖ್ಯಾತಿಯ ʻನೀತುʼ!

Kannada Serials
ಕಿರುತೆರೆ8 months ago

Kannada Serials TRP: ನಾಲ್ಕನೇ ಸ್ಥಾನಕ್ಕೆ ಕುಸಿತ ಕಂಡ ʻಸೀತಾ ರಾಮʼ; ಟಿಆರ್‌ಪಿ ರೇಸ್‌ಗೆ ʻಭಾಗ್ಯಲಕ್ಷ್ಮಿʼ ಬ್ಯಾಕ್‌!

Kannada Serials
ಕಿರುತೆರೆ8 months ago

Kannada Serials TRP: ಟಿಆರ್‌ಪಿಯಲ್ಲಿ ʻಭಾಗ್ಯಲಕ್ಷ್ಮೀʼ ಹವಾ; ʻಪುಟ್ಟಕ್ಕನ ಮಕ್ಕಳುʼ ಧಾರಾವಾಹಿಗೆ ಸಂಕಷ್ಟ!

Bigg Boss' dominates TRP; Sita Rama fell to the sixth position
ಕಿರುತೆರೆ7 months ago

Kannada Serials TRP: ಟಿಆರ್‌ಪಿಯಲ್ಲಿ ʻಬಿಗ್ ಬಾಸ್ʼದೇ ಮೇಲುಗೈ; 6ನೇ ಸ್ಥಾನಕ್ಕೆ ಕುಸಿದ ʻಸೀತಾ ರಾಮʼ

geetha serial Dhanush gowda engagement
ಕಿರುತೆರೆ5 months ago

Dhanush Gowda: ಗೀತಾ ಧಾರಾವಾಹಿ ನಟನ ನಿಶ್ಚಿತಾರ್ಥ; ಭವ್ಯಾಳ ಕಮೆಂಟ್‌ ಬಾಕ್ಸ್‌ ಆಫ್‌!

varun
ಕಿರುತೆರೆ6 months ago

Brindavana Serial: ʼಬೃಂದಾವನʼ ಧಾರಾವಾಹಿಯಲ್ಲಿ ದೊಡ್ಡ ಟ್ವಿಸ್ಟ್‌; ಪ್ರಮುಖ ಪಾತ್ರಧಾರಿಯೇ ಬದಲು

Kannada Serials
ಕಿರುತೆರೆ8 months ago

Kannada Serials TRP: ಟಿಆರ್‌ಪಿಯಲ್ಲಿ ಏರಿಕೆ ಕಂಡ ʻಅಮೃತಧಾರೆʼ; ʻಗಟ್ಟಿಮೇಳʼಕ್ಕೆ ನಾಲ್ಕನೇ ಸ್ಥಾನ!

Karnataka Rain
ಮಳೆ58 mins ago

Karnataka Rain : ಒಂದೇ ಮಳೆಗೆ ಹೊಳೆಯಂತಾದ ಬೆಂಗಳೂರು ರಸ್ತೆಗಳು! ಕಳಸದಲ್ಲೂ ಮುಂದುವರಿದ ಅಬ್ಬರ

Karnataka rain
ಮಳೆ2 hours ago

Karnataka Rain : ವಿಜಯನಗರದಲ್ಲಿ ಸಿಡಿಲಿಗೆ ಜಾನುವಾರು ಬಲಿ; ಬೆಂಗಳೂರು ಸೇರಿ ಹಲವೆಡೆ ಭಾರಿ ಮಳೆ

Karnataka Rain
ಮಳೆ3 hours ago

Karnataka Rain: ಧಾರಾಕಾರ ಮಳೆಗೆ ಕಾಂಪೌಂಡ್ ಕುಸಿದು 4 ಬೈಕ್‌ಗಳು ಜಖಂ; ಮದುವೆ ಮಂಟಪಕ್ಕೆ ನುಗ್ಗಿದ ನೀರು‌

Prajwal Revanna Case JDS calls CD Shivakumar pen drive gang
ರಾಜಕೀಯ2 days ago

Prajwal Revanna Case: CD ಶಿವಕುಮಾರ್ ಪೆನ್ ಡ್ರೈವ್ ಗ್ಯಾಂಗ್ ಎಂದ ಕುಟುಕಿದ ಜೆಡಿಎಸ್‌!

Karnataka weather Forecast
ಮಳೆ2 days ago

Karnataka Weather : ಮೈಸೂರು, ಮಂಡ್ಯ ಸೇರಿ ಈ 7 ಜಿಲ್ಲೆಗಳಲ್ಲಿ ವ್ಯಾಪಕ ಮಳೆ ಸಂಭವ

Dina Bhavishya
ಭವಿಷ್ಯ2 days ago

Dina Bhavishya : ಈ ರಾಶಿಯ ಪ್ರೇಮಿಗಳಿಗೆ ಮನೆಯಿಂದ ಸಿಗುತ್ತೆ ಗ್ರೀನ್‌ ಸಿಗ್ನಲ್‌

Karnataka Weather Forecast
ಮಳೆ3 days ago

Karnataka Weather : ಭಾರಿ ಮಳೆಗೆ ಕೊಟ್ಟೂರು ಬಸ್ ಸ್ಟ್ಯಾಂಡ್‌ ಜಲಾವೃತ; ‌ ತಾಯಿ-ಮಗ ಗ್ರೇಟ್‌ ಎಸ್ಕೇಪ್‌

Drowned in water
ಹಾಸನ3 days ago

Drowned in water : ಕೆರೆಯಲ್ಲಿ ಈಜಲು ಹೋದ ನಾಲ್ವರು ನೀರುಪಾಲು; ಓರ್ವ ಬಾಲಕ ಪಾರು

Suspicious Case
ಬೆಂಗಳೂರು3 days ago

Suspicious Case : ಬಾತ್‌ ರೂಂನಲ್ಲಿತ್ತು ಕಾಲೇಜು ಹುಡುಗಿ ಡೆಡ್‌ ಬಾಡಿ; ಕುತ್ತಿಗೆ ಕೊಯ್ದು ಸಾಯಿಸಿದವರು ಯಾರು?

Prajwal Revanna Case
ಕರ್ನಾಟಕ4 days ago

Prajwal Revanna Case: ಪ್ರಜ್ವಲ್‌ ರೇವಣ್ಣ ಇಂದೇ ಜರ್ಮನಿಯಿಂದ ಭಾರತಕ್ಕೆ? ಎಸ್‌ಐಟಿ ಅಲರ್ಟ್‌

ಟ್ರೆಂಡಿಂಗ್‌