Money Guide: ಪಾಸ್‌ಪೋರ್ಟ್‌ ನವೀಕರಣ ಈಗ ಸುಲಭ; ಆನ್‌ಲೈನ್‌ನಲ್ಲಿ ರಿನೀವಲ್‌ ಮಾಡುವ ವಿಧಾನ ಇಲ್ಲಿದೆ - Vistara News

ಮನಿ-ಗೈಡ್

Money Guide: ಪಾಸ್‌ಪೋರ್ಟ್‌ ನವೀಕರಣ ಈಗ ಸುಲಭ; ಆನ್‌ಲೈನ್‌ನಲ್ಲಿ ರಿನೀವಲ್‌ ಮಾಡುವ ವಿಧಾನ ಇಲ್ಲಿದೆ

Money Guide: ನಿಮ್ಮ ಪಾಸ್‌ಪೋರ್ಟ್‌ನ ಅವಧಿ ಮುಗಿಯುವ ಹಂತಕ್ಕೆ ತಲುಪಿದ್ದರೆ, ಕೊನೆಯ ಕ್ಷಣದಲ್ಲಿ ಉಂಟಾಗುವ ಗೊಂದಲದಿಂದ ತಪ್ಪಿಸಲು ಕೂಡಲೇ ನವೀಕರಣಕ್ಕೆ ಅರ್ಜಿ ಸಲ್ಲಿಸಿ. ಆನ್‌ಲೈನ್‌ನಲ್ಲಿ ಅರ್ಜಿ ಸಲ್ಲಿಸುವವರಿಗೆ ಮಾರ್ಗದರ್ಶನ ಇಲ್ಲಿದೆ.

VISTARANEWS.COM


on

Passport Renewal
ಮಹತ್ವದ, ಕುತೂಹಲಕರ ಸುದ್ದಿಗಾಗಿ ಫಾಲೊ ಮಾಡಿ
Koo

ಬೆಂಗಳೂರು: ಪಾಸ್‌ಪೋರ್ಟ್‌ (Passport) ಎಂಬುದು ನಿಮ್ಮ ಗುರುತು ಮತ್ತು ರಾಷ್ಟ್ರೀಯತೆಯನ್ನು ದೃಢೀಕರಿಸುವ ಅಗತ್ಯ ದಾಖಲೆಯಾಗಿದ್ದು, ಇದು ಪ್ರವಾಸ, ವ್ಯವಹಾರ ಅಥವಾ ಶೈಕ್ಷಣಿಕ ಉದ್ದೇಶಗಳಿಗಾಗಿ ವಿದೇಶಗಳಿಗೆ ಪ್ರಯಾಣಿಸಲು ಅನುವು ಮಾಡಿಕೊಡುತ್ತದೆ. ಇದರ ಅವಧಿ ವಯಸ್ಕರಿಗೆ ನೀಡಿದ ದಿನಾಂಕದಿಂದ ಹತ್ತು ವರ್ಷಗಳವರೆಗೆ. ಅಪ್ರಾಪ್ತ ವಯಸ್ಕರಿಗೆ ಐದು ವರ್ಷಗಳವರೆಗೆ ಅಥವಾ ಅವರಿಗೆ 18 ವರ್ಷ ತುಂಬುವವರೆಗೆ ಚಾಲ್ತಿಯಲ್ಲಿರುತ್ತದೆ. ಅದಾದ ಬಳಿಕ ನವೀಕರಣಗೊಳಿಸಬೇಕಾಗುತ್ತದೆ (Passport Renewal). ನಿಮ್ಮ ಉದ್ದೇಶಿತ ಪ್ರಯಾಣದ ಮೇಲೆ ಪರಿಣಾಮ ಬೀರದಿರಲು ಅವಧಿ ಮುಗಿಯುವ ಕನಿಷ್ಠ ಒಂಬತ್ತು ತಿಂಗಳ ಮೊದಲು ನವೀಕರಣ ಪ್ರಕ್ರಿಯೆಯನ್ನು ಪ್ರಾರಂಭಿಸಲು ತಜ್ಞರು ಸಲಹೆ ನೀಡುತ್ತಾರೆ. ಪಾಸ್‌ಪೋರ್ಟ್‌ ಅನ್ನು ಆನ್‌ಲೈನ್‌ನಲ್ಲಿಯೇ ನವೀಕರಿಸುವುದು ಹೇಗೆ ಎನ್ನುವ ಮಾಹಿತಿ ಇಂದಿನ ಮನಿಗೈಡ್‌ (Money Guide)ನಲ್ಲಿದೆ.

ಆನ್‌ಲೈನ್‌ನಲ್ಲಿ ಪಾಸ್‌ಪೋರ್ಟ್‌ ನವೀಕರಿಸುವ ವಿಧಾನ

  • ಪಾಸ್‌ಪೋರ್ಟ್‌ ಸೇವಾ ವೆಬ್‌ಸೈಟ್‌ https://passportindia.gov.in/ಗೆ ಭೇಟಿ ನೀಡಿ.
  • ಹೊಸಬರಾಗಿದ್ದರೆ ಹೆಸರು ನೋಂದಾಯಿಸಿ. ಮೊದಲೇ ಹೆಸರು ನೋಂದಾಯಿಸಿದ್ದರೆ ಲಾಗಿನ್‌ ಆಗಿ.
  • ‘Apply for Fresh Passport/Re-issue of Passportʼ ಆಯ್ಕೆ ಮೇಲೆ ಕ್ಲಿಕ್‌ ಮಾಡಿ.
  • ‘Click here to fill the application formʼ ಆಯ್ಕೆಯನ್ನು ಸೆಲೆಕ್ಟ್‌ ಮಾಡಿ.
  • ನಿಮ್ಮ ಹೆಸರು, ವಿಳಾಸ, ವೈಯಕ್ತಿಕ ಮಾಹಿತಿ ನೀಡಿ ಅಪ್ಲಿಕೇಷನ್‌ ಫಾರಂ ಭರ್ತಿ ಮಾಡಿ.
  • ತುರ್ತು ಸಂದರ್ಭದಲ್ಲಿ ಸಂಪರ್ಕಿಸಬೇಕಾದ ಫೋನ್‌ ನಂಬರ್‌ ಮತ್ತು ಹಿಂದಿನ ಪಾಸ್‌ಪೋರ್ಟ್‌ನ ಮಾಹಿತಿ ನಮೂದಿಸಿ.
  • Self-declarationಗೆ ಒಪ್ಪಿಗೆ ಸೂಚಿಸಿ ಮತ್ತು Submit ಬಟನ್‌ ಕ್ಲಿಕ್‌ ಮಾಡಿ.
  • ಫಾರಂ ಸಲ್ಲಿಸಿದ ನಂತರ ಪಾಸ್‌ಪೋರ್ಟ್‌ ನವೀಕರಣ ಶುಲ್ಕವನ್ನು ಪಾವತಿಸಿ ಮತ್ತು ಅಪಾಯಿಂಟ್‌ಮೆಂಟ್‌ ದಿನಾಂಕ ನಿಗದಿಪಡಿಸಿ.

ಅಪಾಯಿಂಟ್‌ಮೆಂಟ್‌ ನಿಗದಿಪಡಿಸುವುದು ಹೇಗೆ?

  • ಪಾಸ್‌ಪೋರ್ಟ್‌ ಸೇವಾ ವೆಬ್‌ಸೈಟ್‌ https://passportindia.gov.in/ಗೆ ಭೇಟಿ ನೀಡಿ ಲಾಗಿನ್‌ ಆಗಿ.
  • ‘View Saved and Submitted Application’ ಬಟನ್‌ ಸೆಲೆಕ್ಟ್‌ ಮಾಡಿ ‘Pay and Schedule Appointmentʼ ಆಪ್ಶನ್‌ ಆಯ್ಕೆ ಮಾಡಿ
  • ಶುಲ್ಕ ಪಾವತಿ ವಿಧಾನ ಆಯ್ಕೆ ಮಾಡಿ ಪಾಸ್‌ಪೋರ್ಟ್‌ ಸೇವಾ ಕೇಂದ್ರವನ್ನು ಆರಿಸಿ.
  • ಕ್ಯಾಪ್ಚಾ ಕೋಡ್‌ ನಮೂದಿಸಿ ನಿಮ್ಮ ಸೇವಾಕೇಂದ್ರವನ್ನು ದೃಢಪಡಿಸಿ.
  • ಲಭ್ಯವಿರುವ ದಿನಾಂಕಗಳಿಂದ ಅನುಕೂಲಕರ ಸ್ಲಾಟ್ ಆಯ್ಕೆ ಮಾಡಿ ಮತ್ತು ‘Pay and Book the Appointmentʼ ಆಪ್ಶನ್‌ ಸೆಲೆಕ್ಟ್‌ ಮಾಡಿ.

ನವೀಕರಣ ಶುಲ್ಕ ಎಷ್ಟು?

ನವೀಕರಣ ಶುಲ್ಕಗಳು ವಯಸ್ಸು, ಪುಸ್ತಕದ ಪುಟ ಮತ್ತು ಆಯ್ಕೆ ಮಾಡಿದ ಪಾಸ್‌ಪೋರ್ಟ್‌ (ಸಾಮಾನ್ಯ ಅಥವಾ ತತ್ಕಾಲ್) ಆಧಾರದ ಮೇಲೆ ಬದಲಾಗುತ್ತವೆ. ತತ್ಕಾಲ್ ಪಾಸ್‌ಪೋರ್ಟ್‌ಗೆ 2.000 ರೂ.ಗಳ ಹೆಚ್ಚುವರಿ ಶುಲ್ಕ ವಿಧಿಸಲಾಗುತ್ತದೆ.

ಅಗತ್ಯ ದಾಖಲೆಗಳು

ನವೀಕರಣಕ್ಕೆ ಮೂಲ ಪಾಸ್‌ಪೋರ್ಟ್‌, ಅರ್ಜಿ ಸ್ವೀಕೃತಿ, ಸಂಬಂಧಿತ ಪುಟಗಳ ಸ್ವಯಂ-ದೃಢೀಕರಿಸಿದ ಪ್ರತಿಗಳು, ವಿಳಾಸದ ಪುರಾವೆ ಮತ್ತು ಇತರ ನಿರ್ದಿಷ್ಟ ದಾಖಲೆಗಳು ಅಗತ್ಯ. ದಾಖಲೆಗಳನ್ನು ಅಪ್‌ಲೋಡ್‌ ಮಾಡಿದ ನಂತರ, ನವೀಕರಣ ಪ್ರಕ್ರಿಯೆಯನ್ನು ಪೂರ್ಣಗೊಳಿಸಲು ನೀವು ನಿರ್ದಿಷ್ಟ ದಿನಾಂಕದಂದು ಪಾಸ್‌ಪೋರ್ಟ್‌ ಸೇವಾ ಕೇಂದ್ರಕ್ಕೆ ಭೇಟಿ ನೀಡಬೇಕಾಗುತ್ತದೆ.

ಪಾಸ್‌ಪೋರ್ಟ್‌ ನವೀಕರಣವನ್ನು ಪರೀಶೀಲಿಸುವ ವಿಧಾನ

  • ಪಾಸ್‌ಪೋರ್ಟ್‌ ಸೇವಾ ವೆಬ್‌ಸೈಟ್‌ https://passportindia.gov.in/ಗೆ ಭೇಟಿ ನೀಡಿ ಲಾಗಿನ್‌ ಆಗಿ.
  • ‘Track application statusʼ ಆಪ್ಶನ್‌ ಆಯ್ಕೆ ಮಾಡಿ.
  • ಅಪ್ಲಿಕೇಷನ್‌ ಮಾದರಿ, ಫೈಲ್‌ ನಂಬರ್‌ ಮತ್ತು ಡೇಟ್‌ ಆಫ್‌ ಬರ್ತ್‌ ನಮೂದಿಸಿ.
  • ‘Track Status’ ಆಯ್ಕೆ ಮೇಲೆ ಕ್ಲಿಕ್‌ ಮಾಡಿ.

ಎಷ್ಟು ಸಮಯ ಬೇಕು?

ನವೀಕರಣ ಪ್ರಕ್ರಿಯೆಯ ಸಮಯವು ಆಯ್ಕೆ ಮಾಡಿದ ಪಾಸ್‌ಪೋರ್ಟ್‌ ಮಾದರಿಯನ್ನು ಅವಲಂಬಿಸಿರುತ್ತದೆ. ಸಾಮಾನ್ಯ ಪಾಸ್‌ಪೋರ್ಟ್‌ 30-60 ದಿನಗಳನ್ನು ತೆಗೆದುಕೊಂಡರೆ, ತತ್ಕಾಲ್ ಪಾಸ್‌ಪೋರ್ಟ್‌ 3-7 ದಿನಗಳಲ್ಲಿ ತ್ವರಿತವಾಗಿ ನವೀಕರಣಗೊಳ್ಳುತ್ತದೆ.

ಇದನ್ನೂ ಓದಿ: Money Guide: ಆನ್‌ಲೈನ್‌ ಸಾಲ ಎಂಬ ಚಕ್ರವ್ಯೂಹಕ್ಕೆ ಸಿಲುಕದಿರಲು ಹೀಗೆ ಮಾಡಿ…

ಕ್ಷಣ ಕ್ಷಣದ ಮಾಹಿತಿಗಾಗಿ Vistara News FaceBook ಪೇಜ್ ಫಾಲೋ ಮಾಡಿ
ಮಹತ್ವದ ಮಾಹಿತಿಗಾಗಿ ವಿಸ್ತಾರ ನ್ಯೂಸ್ ಆ್ಯಪ್ ಉಚಿತವಾಗಿ ಡೌನ್ ಲೋಡ್ ಮಾಡಿಕೊಳ್ಳಿ: Andriod App | IOS App
Continue Reading
Click to comment

Leave a Reply

Your email address will not be published. Required fields are marked *

ಮನಿ-ಗೈಡ್

Money Guide: 1 ಕೋಟಿ ರೂ. ದುಡಿಯಬೇಕೆ? ಈ ಅಪಾಯ ರಹಿತ ಯೋಜನೆಯಲ್ಲಿ ಹೂಡಿಕೆ ಮಾಡಿ

Money Guide: ಭವಿಷ್ಯಕ್ಕಾಗಿ ಹೂಡಿಕೆ ಮಾಡಬೇಕು ಎನ್ನುವುದು ಬಹುತೇಕರ ಆಗ್ರಹ. ಆದರೆ ಯಾವ ಯೋಜನೆಯಲ್ಲಿ ಹೂಡಿಕೆ ಮಾಡಿದರೆ ಉತ್ತಮ ಎನ್ನವ ಬಗ್ಗೆ ಗೊಂದಲ ಮೂಡುತ್ತದೆ. ಇಲ್ಲಿ ನಾವು ನಿಮಗೆ ಪರಿಚಯಿಸುವ ಯೋಜನೆ ಸರ್ಕಾರಿ ಬೆಂಬಲಿತ ಪ್ಲಾನ್‌ ಆಗಿದ್ದು, ಇಲ್ಲಿ ಹೂಡಿಕೆ ಮಾಡುವುದರಿಂದ ಯಾವುದೇ ಆತಂಕವಿಲ್ಲ. ಈ ಯೋಜನೆಯಲ್ಲಿ ಹೂಡಿಕೆ ಮಾಡುವ ಮೂಲಕ ನೀವು 1 ಕೋಟಿ ರೂ.ಗಿಂತ ಹೆಚ್ಚು ಸಂಗ್ರಹಿಸಬಹುದು. ಹಾಗಾದರೆ ಇದು ಯಾವ ಯೋಜನೆ? ಯಾರೆಲ್ಲ ಹೂಡಿಕೆ ಮಾಡಬಹುದು? ನಿಮ್ಮ ಪ್ರಶ್ನೆಗೆ ಇಲ್ಲಿದೆ ಉತ್ತರ.

VISTARANEWS.COM


on

Money Guide
Koo

ಬೆಂಗಳೂರು: ದಿನದಿಂದ ದಿನಕ್ಕೆ ಹೆಚ್ಚುತ್ತಿರುವ ಬೆಲೆ, ದುಬಾರಿ ಜೀವನ ಶೈಲಿಯಿಂದಾಗಿ ಹಣಕಾಸಿನ ವಿಚಾರದಲ್ಲಿ ಎಲ್ಲರೂ ಎಚ್ಚರಿಕೆ ವಹಿಸಲೇಬೇಕಾದ ಅನಿವಾರ್ಯತೆ ಎದುರಾಗಿದೆ. ಹೀಗಾಗಿ ಪ್ರತಿಯೊಬ್ಬರೂ ಉಳಿತಾಯ ಮಾಡುವತ್ತ ಗಮನ ಹರಿಸಬೇಕು ಎನ್ನುವುದು ಆರ್ಥಿಕ ತಜ್ಞರ ಸಲಹೆ. ಹಾಗಾದರೆ ಉಳಿತಾಯ, ನಿವೃತ್ತಿ ಯೋಜನೆಗಳಲ್ಲಿ ಹೂಡಿಕೆ ಮಾಡುವುದಾದರೆ ಯಾವುದು ಉತ್ತಮ? ಎನ್ನುವ ಪ್ರಶ್ನೆ ಸಹಜವಾಗಿ ಎದುರಾಗುತ್ತದೆ. ಇದಕ್ಕೆ ತಜ್ಞರು ನೀಡುವ ಉತ್ತರ ಸಾರ್ವಜನಿಕ ಭವಿಷ್ಯ ನಿಧಿ (Public Provident Fund). ಇದು ಕೇಂದ್ರ ಸರ್ಕಾರ ಬೆಂಬಲಿತ ಪ್ಲಾನ್‌ ಆಗಿದ್ದು, ಸಣ್ಣ ಹೂಡಿಕೆದಾರರು ಈ ಯೋಜನೆಯನ್ನು ಆಯ್ಕೆ ಮಾಡಿಕೊಳ್ಳಬಹುದು. ಸರ್ಕಾರಿ ಬೆಂಬಲಿತ ಪ್ಲಾನ್‌ ಆದ ಕಾರಣ ಇಲ್ಲಿ ಹೂಡಿಕೆ ಮಾಡುವುದು ಅಪಾಯಕಾರಿ ಅಲ್ಲ ಎನ್ನುವುದು ಬಹು ದೊಡ್ಡ ಪ್ಲಸ್‌ ಪಾಯಿಂಟ್‌. ಪಿಪಿಎಫ್‌ ಖಾತೆ ತೆರೆಯುವವರಿಗೆ ವಾರ್ಷಿಕ ಶೇ. 7.1ರಷ್ಟು ಬಡ್ಡಿ ದೊರೆಯಲಿದೆ. ಅಲ್ಲದೆ ಈ ಹೂಡಿಕೆಯ ಮೂಲಕ ಸಾಲವನ್ನೂ ಪಡೆಯಬಹುದು. ಜತೆಗೆ ತೆರಿಗೆ ವಿನಾಯಿತಿಯೂ ಲಭಿಸುತ್ತದೆ. ವಿಶೇಷ ಎಂದರೆ ನಿಯತಕಾಲಿಕ ಹೂಡಿಕೆಗಳು ಮತ್ತು ಸಂಯೋಜನೆಯ ಮೂಲಕ ನೀವು ಪಿಪಿಎಫ್‌ನಿಂದ 1 ಕೋಟಿ ರೂ.ಗಿಂತ ಹೆಚ್ಚಿನ ಹಣವನ್ನು ಸಂಗ್ರಹಿಸಬಹುದು. ಅದು ಹೇಗೆ ಎನ್ನುವ ವಿವರ ಇಲ್ಲಿದೆ (Money Guide).

1 ಕೋಟಿ ರೂ. ಪಡೆಯುವ ವಿಧಾನ

ಹೂಡಿಕೆ ಅವಧಿಒಟ್ಟು ಪಿಪಿಎಫ್‌
ಹೂಡಿಕೆ
ಒಟ್ಟು ಬಡ್ಡಿಮೆಚ್ಯೂರಿಟಿ ಮೊತ್ತ
15 ವರ್ಷ1.5 ಲಕ್ಷ ರೂ.18.18 ಲಕ್ಷ ರೂ.40.68 ಲಕ್ಷ ರೂ.
20 ವರ್ಷ1.5 ಲಕ್ಷ ರೂ.36.58 ಲಕ್ಷ ರೂ.66.58 ಲಕ್ಷ ರೂ.
30 ವರ್ಷ1.5 ಲಕ್ಷ ರೂ.1.09 ಕೋಟಿ ರೂ.1.54 ಕೋಟಿ ರೂ.

ವಿವಿಧ ಅವಧಿಗಳಲ್ಲಿ ವಾರ್ಷಿಕವಾಗಿ 1.5 ಲಕ್ಷ ರೂ. ಹೂಡಿಕೆ ಮಾಡುವ ಮೂಲಕ ನಿಮ್ಮ ಮೆಚ್ಯೂರಿಟಿ ಮೊತ್ತವು 40 ಲಕ್ಷ ರೂ.ಯಿಂದ 1.5 ಕೋಟಿ ರೂ.ಗೆ ಹೇಗೆ ಬೆಳೆಯಬಹುದು ಎಂಬುದನ್ನು ಮೇಲಿನ ಉದಾಹರಣೆ ವಿವರಿಸುತ್ತದೆ.

ತೆರಿಗೆ ವಿನಾಯಿತಿ

ಇನ್ನು ಸೆಕ್ಷನ್‌ 80 ಸಿ ಅಡಿಯಲ್ಲಿ 1.5 ಲಕ್ಷ ರೂ. ತನಕ ತೆರಿಗೆ ವಿನಾಯಿತಿ ಸಿಗಲಿದೆ. ಅಂದರೆ ಯೋಜನೆಯಲ್ಲಿ ಮಾಡಿದ ಸಂಪೂರ್ಣ ಹೂಡಿಕೆಯ ಮೇಲೆ ತೆರಿಗೆ ವಿನಾಯಿತಿಯ ಪ್ರಯೋಜನವನ್ನು ನೀವು ಪಡೆಯುತ್ತೀರಿ. ಇದಲ್ಲದೆ, ಹೂಡಿಕೆಯಿಂದ ಪಡೆದ ಬಡ್ಡಿಗೂ ಯಾವುದೇ ತೆರಿಗೆ ಪಾವತಿಸಬೇಕಾಗಿಲ್ಲ. ಅಲ್ಲದೆ ಯೋಜನೆ ಮುಕ್ತಾಯವಾದ ಬಳಿಕ ಪಡೆದಯುವ ಮೊತ್ತವೂ ತೆರಿಗೆಮುಕ್ತವಾಗಿರುತ್ತದೆ.

ಸಾಲ ಪಡೆಯಲಿರುವ ಅರ್ಹತೆ

ಪಬ್ಲಿಕ್‌ ಪ್ರಾವಿಡೆಂಟ್‌ ಫಂಡ್‌ನಲ್ಲಿ ನೀವು ಮಾಡುವ ಇನ್ವೆಸ್ಟ್‌ಮೆಂಟ್‌ ಮೇಲೆ ಸಾಲ ಪಡೆಯಬಹುದು. ಖಾತೆ ತೆರೆದ 3-6ನೇ ವರ್ಷದಲ್ಲಿ ಸಾಲ ಪಡೆಯಲು ನೀವು ಅರ್ಹರಾಗಿರುತ್ತೀರಿ. ಇಂಥ ಸಾಲದ ಗರಿಷ್ಠ ಅವಧಿ 36 ತಿಂಗಳು. ಅಕೌಂಟ್‌ನಲ್ಲಿರುವ ಮೊತ್ತದ 25% ಅಥವಾ ಕಡಿಮೆ ಮೊತ್ತವನ್ನು ಮಾತ್ರ ಸಾಲಕ್ಕಾಗಿ ಕ್ಲೈಮ್‌ ಮಾಡಿಕೊಳ್ಳಬಹುದು.‌

ಯಾರೆಲ್ಲ ತೆರೆಯಬಹುದು?

ಭಾರತೀಯ ನಾಗರಿಕರು ಪಿಪಿಎಫ್‌ ಖಾತೆಯನ್ನು ತೆರೆಯಬಹುದು. ಅಪ್ರಾಪ್ತ ವಯಸ್ಕರ ಹೆಸರಿನಲ್ಲಿಯೂ ಖಾತೆ ತೆರೆಯುವ ಸೌಕರ್ಯವಿದೆ. ಅನಿವಾಸಿ ಭಾರತೀಯರು ಹೊಸ ಪಿಪಿಎಫ್‌ ಅಕೌಂಟ್‌ ತೆರೆಯುವಂತಿಲ್ಲ. ಹೀಗಿದ್ದರೂ ಈಗಾಗಲೇ ಇದ್ದರೆ ಅದು ಪೂರ್ಣವಾಗುವ ತನಕ ಸಕ್ರಿಯವಾಗಿರುತ್ತದೆ. ಆದರೆ 5 ವರ್ಷಗಳ ಹೆಚ್ಚುವರಿ ಅವಧಿ ಇರುವುದಿಲ್ಲ. ಈ ಯೋಜನೆಯಲ್ಲಿ ನೀವು ವರ್ಷಕ್ಕೆ ಕನಿಷ್ಠ 500 ರೂ ಮತ್ತು ಗರಿಷ್ಠ 1.5 ಲಕ್ಷ ರೂ.ಗಳನ್ನು ಹೂಡಿಕೆ ಮಾಡಬಹುದು. ಒಂದು ಹಣಕಾಸು ವರ್ಷದಲ್ಲಿ ನೀವು ಗರಿಷ್ಠ 12 ಕಂತುಗಳಲ್ಲಿ ಹಣವನ್ನು ಠೇವಣಿ ಇಡುವ ಸೌಲಭ್ಯವೂ ಇದೆ. ಆಫ್‌ಲೈನ್‌ ಹಾಗೂ ಆನ್‌ಲೈನ್‌ ವಿಧಾನದಲ್ಲಿ ಪಿಪಿಎಫ್‌ ಖಾತೆಯನ್ನು ತೆರೆಯಬಹುದು. 

ಇದನ್ನೂ ಓದಿ: Money Guide: ತೆರಿಗೆ ವಿನಾಯಿತಿ ಪಡೆಯಬೇಕೆ? ಮಾ. 31ರೊಳಗೆ ಪಿಪಿಎಫ್‌ನಲ್ಲಿ ಹೂಡಿಕೆ ಮಾಡಿ

Continue Reading

ಮನಿ-ಗೈಡ್

Money Guide: ಜನಪ್ರಿಯವಾಗುತ್ತಿದೆ ʼಈಗ ಖರೀದಿಸಿ, ನಂತರ ಪಾವತಿಸಿʼ ಆಯ್ಕೆ: ಏನಿದು ಬಿಎನ್‌ಪಿಎಲ್‌? ಬಳಕೆ ಹೇಗೆ? ಇಲ್ಲಿದೆ ವಿವರ

Money Guide: ಯಾವುದೇ ಒಂದು ವಸ್ತು ಖರೀದಿಸಲು ತಕ್ಷಣಕ್ಕೆ ನಿಮ್ಮ ಬಳಿ ಹಣ ಇಲ್ಲದಿದ್ದರೆ ಹೆಸರೇ ಹೇಳುವಂತೆ ಈಗ ಖರೀದಿಸಿ ನಂತರ ಪಾವತಿಸಬಹುದು ಆಯ್ಕೆಯನ್ನು ಬಳಸಿಕೊಳ್ಳಬಹುದು. ಇ-ಕಾಮರ್ಸ್ ತಾಣಗಳು ಈ ವಿಧಾನದ ಮೂಲಕ ಗ್ರಾಹಕರಿಗೆ ವಸ್ತುಗಳ ಖರೀದಿಗೆ ಬಡ್ಡಿರಹಿತ ಕಿರು ಅವಧಿಯ ಸಾಲಗಳನ್ನು ಒದಗಿಸುತ್ತಿವೆ. ಅಂದರೆ ನೀವು ವಸ್ತು ಖರೀದಿಸಿದ ಬಳಿಕ ಹಂತ ಹಂತವಾಗಿ ಕಂತುಗಳಲ್ಲಿ ದುಡ್ಡು ಪಾವತಿಸದರಾಯ್ತು. ಅಂದರೆ ಈ ಸಾಲ ಬಳಸಿಕೊಂಡು ಗ್ರಾಹಕರು ವಸ್ತುಗಳನ್ನು ಖರೀದಿಸಿ, ಆ ಬಳಿಕ ಬಡ್ಡಿರಹಿತ ಇಎಂಐಗಳ ಮೂಲಕ ಪಾವತಿ ಮಾಡಬಹುದು.

VISTARANEWS.COM


on

Money Guide
Koo

ಬೆಂಗಳೂರು: ಬಿಎನ್‌ಪಿಎಲ್‌ (BNPL) ಬಗ್ಗೆ ನಿಮಗೆ ಗೊತ್ತೆ? ಬಿಎಸ್‌ಎಸ್‌ಎಲ್‌ ಗೊತ್ತು. ಇದೇನಿದು ಬಿಎನ್‌ಪಿಎಲ್‌ ಎಂದು ಎಂದು ಜಾಸ್ತಿ ತಲೆ ಕೆಡಿಸಿಕೊಳ್ಳಬೇಡಿ. ʼಈಗ ಖರೀದಿಸಿ, ನಂತರ ಪಾವತಿಸಿʼ (Buy Now, Pay Later)ಯ ಸಂಕ್ಷಿಪ್ತ ರೂಪವೇ ಬಿಎನ್‌ಪಿಎಲ್‌. ಯಾವುದೇ ಒಂದು ವಸ್ತು ಖರೀದಿಸಲು ತಕ್ಷಣಕ್ಕೆ ನಿಮ್ಮ ಬಳಿ ಹಣ ಇಲ್ಲದಿದ್ದರೆ ಹೆಸರೇ ಹೇಳುವಂತೆ ಈಗ ಖರೀದಿಸಿ ನಂತರ ಪಾವತಿಸಬಹುದು ಆಯ್ಕೆಯನ್ನು ಬಳಸಿಕೊಳ್ಳಬಹುದು. ಇ-ಕಾಮರ್ಸ್ ತಾಣಗಳು ಈ ವಿಧಾನದ ಮೂಲಕ ಗ್ರಾಹಕರಿಗೆ ವಸ್ತುಗಳ ಖರೀದಿಗೆ ಬಡ್ಡಿರಹಿತ ಕಿರು ಅವಧಿಯ ಸಾಲಗಳನ್ನು ಒದಗಿಸುತ್ತಿವೆ. ಅಂದರೆ ನೀವು ವಸ್ತು ಖರೀದಿಸಿದ ಬಳಿಕ ಹಂತ ಹಂತವಾಗಿ ಕಂತುಗಳಲ್ಲಿ ದುಡ್ಡು ಪಾವತಿಸದರಾಯ್ತು. ಅಂದರೆ ಈ ಸಾಲ ಬಳಸಿಕೊಂಡು ಗ್ರಾಹಕರು ವಸ್ತುಗಳನ್ನು ಖರೀದಿಸಿ, ಆ ಬಳಿಕ ಬಡ್ಡಿರಹಿತ ಇಎಂಐಗಳ ಮೂಲಕ ಪಾವತಿ ಮಾಡಬಹುದು. ಸದ್ಯ ಇದು ಭಾರತೀಯ ಮಧ್ಯಮ ವರ್ಗದ ಜನರ ನೆಚ್ಚಿನ ಆಯ್ಕೆ ಎನಿಸಿಕೊಂಡಿದೆ. ಈ ಬಗೆಗಿನ ವಿವರ ಇಲ್ಲಿದೆ (Money Guide).

ಗಮನ ಸೆಳೆಯುತ್ತಿದೆ

ಈ ಬಿಎನ್‌ಪಿಎಲ್‌ ಸಾಂಪ್ರದಾಯಿಕ ಕ್ರೆಡಿಟ್ ಕಾರ್ಡ್‌ ಮತ್ತು ಸಾಲಗಳಿಗೆ ಪರ್ಯಾಯವಾಗಿ ಗುರುತಿಸಿಕೊಂಡಿದೆ. ಬಡ್ಡಿ ಪಾವತಿಸಬೇಕಾಗಿಲ್ಲ ಎನ್ನುವ ಅಂಶವೇ ಈ ಪಾವತಿ ವಿಧಾನದ ಬಹುದೊಡ್ಡ ಪ್ಲಸ್‌ ಪಾಯಿಂಟ್‌. ಅಲ್ಲದೆ ಬಿಎನ್‌ಪಿಎಲ್ ಸೇವೆ ಸಾಮಾನ್ಯವಾಗಿ ತ್ವರಿತ ಮತ್ತು ಸುಲಭವಾಗಿ ಮಂಜೂರಾಗುತ್ತದೆ. ಇದಕ್ಕೆ ಕನಿಷ್ಠ ಕ್ರೆಡಿಟ್ ಚೆಕ್ ಗಳ ಅಗತ್ಯವಿರುತ್ತದೆ. ಆದರೆ ಗಮನಿಸಿ ಬಿಎನ್‌ಪಿಎಲ್ ತಿಂಗಳ ಮರುಪಾವತಿಯನ್ನು ಮಿಸ್ ಮಾಡಿದರೆ ಅದು ನಿಮ್ಮ ಸಿಬಿಲ್ ಸ್ಕೋರ್ ಮೇಲೆ ಕೆಟ್ಟ ಪರಿಣಾಮ ಬೀರುತ್ತದೆ. ಹೀಗಾಗಿ ಸೂಕ್ತ ಸಮಯದಲ್ಲಿ ಮರು ಪಾವತಿಗೆ ಗಮನ ಹರಿಸಿ. ಅಲ್ಲದೆ ಕ್ರೆಡಿಟ್‌ ಕಾರ್ಡ್‌ಗೆ ಹೋಲಿಸಿದರೆ ಬಿಎನ್‌ಪಿಎಲ್‌ ಕಾರ್ಡ್‌ಗಳಿಗೆ ಆರಂಭದಲ್ಲಿ ಅಲ್ಪ ಮೊತ್ತವಷ್ಟೇ ಲಭಿಸುತ್ತದೆ.

ಗಮನಿಸಬೇಕಾದ ಅಂಶ

ಬಿಎನ್‌ಪಿಎಲ್‌ ಕಾರ್ಡ್‌ ಪಡೆಯುವ ಮುನ್ನ ಈ ಅಂಶಗಳನ್ನು ಗಮನಿಸಿ.

  • ಬಜೆಟ್ ಮುಖ್ಯ: ಬಿಎನ್‌ಪಿಎಲ್ ಮೇಲ್ನೋಟಕ್ಕೆ ಅನುಕೂಲಕವೆಂದು ತೋರಬಹುದು. ಆದರೆ ನಿಮ್ಮ ಸಾಲ ಹೆಚ್ಚಾಗಲು ಇದು ಕಾರಣವಾಗಬಹುದು. ಬಿಎನ್‌ಪಿಎಲ್‌ ಕಾರ್ಡ್‌ ಪಡೆಯುವ ಮುನ್ನ ಅಸ್ತಿತ್ವದಲ್ಲಿರುವ ಸಾಲ ಮತ್ತು ಬಾಧ್ಯತೆಗಳನ್ನು ಪರಿಗಣಿಸಿ.
  • ಷರತ್ತುಗಳನ್ನು ಗಮನಿಸಿ: ಬಡ್ಡಿ-ಮುಕ್ತ ಎಂದು ಜಾಹೀರಾತು ನೀಡಲಾಗಿದ್ದರೂ ಪಾವತಿಯ ವಿಳಂಬಕ್ಕೆ ಹೆಚ್ಚಿನ ದಂಡ ಪಾವತಿಸಬೇಕಾಗುತ್ತದೆ. ಈ ದಂಡಗಳು ಮತ್ತು ಯಾವುದೇ ಪೂರ್ವಪಾವತಿ ನಿರ್ಬಂಧಗಳನ್ನು ಅರ್ಥ ಮಾಡಿಕೊಳ್ಳಲು ನಿಯಮಗಳು ಮತ್ತು ಷರತ್ತುಗಳನ್ನು ಸಂಪೂರ್ಣವಾಗಿ ಓದಿ.
  • ಸಿಬಿಲ್‌ ಸ್ಕೋರ್‌ ಮೇಲೆ ಪರಿಣಾಮ: ವಿಳಂಬ ಪಾವತಿ ನಿಮ್ಮ ಸಿಬಿಲ್‌ ಸ್ಕೋರ್‌ ಮೇಲೆ ಪರಿಣಾಮ ಬೀರುತ್ತದೆ. ಆದ್ದರಿಂದ ಈ ಬಗ್ಗೆ ಎಚ್ಚರ ವಹಿಸಿ.
  • ಎಲ್ಲ ಶುಲ್ಕಗಳನ್ನು ಅರ್ಥ ಮಾಡಿಕೊಳ್ಳಿ: ಕೆಲವು ಬಿಎನ್‌ಪಿಎಲ್‌ ಸೇವೆಗಳು ಸಂಸ್ಕರಣಾ ಶುಲ್ಕಗಳನ್ನು ಹೊಂದಿರುತ್ತವೆ. ಇದರಲ್ಲಿ ಒಳಗೊಂಡಿರುವ ಎಲ್ಲ ವೆಚ್ಚಗಳನ್ನು ಅರ್ಥಮಾಡಿಕೊಳ್ಳಿ. ವಿಳಂಬ ಪಾವತಿ ಶುಲ್ಕಗಳು, ಸಂಸ್ಕರಣಾ ಶುಲ್ಕಗಳು ಅಥವಾ ದಂಡಗಳಂತಹ ಗುಪ್ತ ಶುಲ್ಕಗಳನ್ನು ಗಮನಿಸಿ.
  • ಸೀಮಿತ ಬಳಕೆ: ಬಿಎನ್‌ಪಿಎಲ್ ಎಲ್ಲೆಡೆ ಇಲ್ಲದಿರಬಹುದು. ಕ್ರೆಡಿಟ್ ಕಾರ್ಡ್‌ಗಳಿಗಿಂತ ಭಿನ್ನವಾಗಿ, ಬಿಎನ್‌ಪಿಎಲ್ ಕಾರ್ಡ್‌ ಅನ್ನು ನಿರ್ದಿಷ್ಟ ವ್ಯಾಪಾರಿಗಳು ಅಥವಾ ಪ್ಲಾಟ್‌ಫಾರ್ಮ್‌ಗಳು ಮಾತ್ರವೇ ಬಳಸುತ್ತವೆ. ನಿಮ್ಮ ನೆಚ್ಚಿನ ಅಂಗಡಿಗಳು ಮತ್ತು ಇ-ಕಾಮರ್ಸ್ ಪ್ಲಾಟ್‌ಫಾರ್ಮ್‌ಗಳು ಬಿಎನ್‌ಪಿಎಲ್ ಆಯ್ಕೆಯನ್ನು ಸ್ವೀಕರಿಸುತ್ತವೆಯೇ ಎಂದು ಪರಿಶೀಲಿಸಿ. ಅಲ್ಲದೆ ಇದು ವಿದೇಶದಲ್ಲಿ ಉಪಯೋಗಕ್ಕೆ ಬರುವುದಿಲ್ಲ.

ಪ್ರಮುಖ ಬ್ರ್ಯಾಂಡ್‌ಗಳು

ಭಾರತದಲ್ಲಿ ಲೇಜಿ ಪೇ, ಸಿಂಪ್ಲ, ಅಮೆಜಾನ್ ಪೇ ಲೇಟರ್, ಫ್ಲಿಪ್ ಕಾರ್ಟ್ ಪೇ ಲೇಟರ್ ಹಾಗೂ ಝೆಸ್ಟ್ ಮನಿ ಪ್ರಮುಖ ಬಿಎನ್‌ಪಿಎಲ್ ಬ್ರ್ಯಾಂಡ್ ಎನಿಸಿಕೊಂಡಿವೆ. ಈ ಎಲ್ಲ ಬ್ರ್ಯಾಂಡ್‌ಗಳು ಕಾರ್ಯವೈಖರಿ ಸಾಮಾನ್ಯವಾಗಿ ಒಂದೇ ರೀತಿಯಲ್ಲಿ ಇರುತ್ತದೆ. ನಿರ್ದಿಷ್ಟ ಇ-ಕಾಮರ್ಸ್ ತಾಣದಿಂದ ಖರೀದಿಸುವಾಗ ನೀವು ‘Buy now, pay later’ ಆಯ್ಕೆ ಮೇಲೆ ಕ್ಲಿಕ್ ಮಾಡಬೇಕು. ಒಟ್ಟು ಮೊತ್ತದಲ್ಲಿ ಸಣ್ಣ ಮೊತ್ತವನ್ನು ಆರಂಭದಲ್ಲಿ ಡೌನ್ ಪೇಮೆಂಟ್ ಮಾಡಬೇಕು. ಉಳಿದ ಮೊತ್ತವನ್ನು ಬಡ್ಡಿರಹಿತ ಇಎಂಐ ಮೂಲಕ ನಿರ್ದಿಷ್ಟ ಅವಧಿಯೊಳಗೆ ಪಾವತಿಸಬೇಕು.

ಯಾರು ಖರೀದಿಸಬಹುದು?

ಬಿಎನ್‌ಪಿಎಲ್‌ ಕಾರ್ಡ್‌ ಅನ್ನು ಖರೀದಿಸಲು ಬೇಕಾದ ಅರ್ಹತೆಗಳು: ಭಾರತದ ಟೈರ್ 1 ಅಥವಾ ಟೈರ್ 2 ನಗರದ ನಿವಾಸಿಯಾಗಿರಬೇಕು, ಕನಿಷ್ಠ 18 ವರ್ಷ ವಯಸ್ಸಾಗಿರಬೇಕು, ವೇತನ ಪಡೆಯುತ್ತಿರಬೇಕು, ನಿಮ್ಮ ಬ್ಯಾಂಕ್ ಖಾತೆ ಹಾಗೂ ಇತರ ಕೆವೈಸಿ ದಾಖಲೆಗಳನ್ನು ಹೊಂದಿರಬೇಕು.

ಇದನ್ನೂ ಓದಿ: Money Guide: ಮನೆಯಲಿ ಇದ್ದರೆ ಚಿನ್ನ ಈ ನಿಯಮ ಅರಿತಿರುವುದು ಚೆನ್ನ: ಗೋಲ್ಡ್‌ ಟ್ಯಾಕ್ಸ್‌ ಏನು ಹೇಳುತ್ತದೆ?

Continue Reading

ಮನಿ-ಗೈಡ್

Money Guide: ಉಮಂಗ್ ಆ್ಯಪ್‌ ಮೂಲಕ ಪಿಎಫ್‌ ಮೊತ್ತ ಹೀಗೆ ವಿತ್‌ಡ್ರಾ ಮಾಡಬಹುದು

Money Guide: ನೌಕರರ ಭವಿಷ್ಯ ನಿಧಿ ಉದ್ಯೋಗಿಗಳ ಪಾಲಿಗೆ ಅತ್ಯುತ್ತಮ ನಿವೃತ್ತಿ ಉಳಿತಾಯ ಆಯ್ಕೆ ಎನಿಸಿಕೊಂಡಿದೆ. ಉದ್ಯೋಗಿಗಳ ಪಾಲಿಗೆ ಅತ್ಯುತ್ತಮ ನಿವೃತ್ತಿ ಉಳಿತಾಯ ಆಯ್ಕೆ ಎನಿಸಿಕೊಂಡಿದೆ. ಈ ಯೋಜನೆಯಲ್ಲಿ ಉದ್ಯೋಗಿಗಳು ಮತ್ತು ಉದ್ಯೋಗದಾತರಿಂದ ನಿರ್ದಿಷ್ಟ ಮೊತ್ತವನ್ನು ಹೂಡಿಕೆ ಮಾಡುವ ಮೂಲಕ ನೌಕರರ ಉಳಿತಾಯ ಮನೋಭಾವವನ್ನು ಉತ್ತೇಜಿಸಲಾಗುತ್ತದೆ. ಪ್ರತಿ ತಿಂಗಳು ತಮ್ಮ ಮೂಲ ವೇತನದ ಶೇ. 12ರಷ್ಟು ಕೊಡುಗೆ ನೀಡುವ ಉದ್ಯೋಗಿಗಳಿಗೆ ಈ ಯೋಜನೆಯು ಶೇ. 8.15 ಬಡ್ಡಿದರವನ್ನು ನೀಡುತ್ತದೆ. ಉದ್ಯೋಗಿಗಳು ನಿವೃತ್ತರಾದ ನಂತರ ತಮ್ಮ ಪಿಎಫ್‌ ಖಾತೆಯಲ್ಲಿ ಸಂಗ್ರಹವಾದ ಸಂಪೂರ್ಣ ಮೊತ್ತವನ್ನು ಹಿಂಪಡೆಯಬಹುದು. ಅದಕ್ಕಾಗಿ ನೀವು ಉಮಾಂಗ್ ಆ್ಯಪ್‌ ಬಳಸಬಹುದು. ಉಮಾಂಗ್ ಆ್ಯಪ್‌ ಬಳಕೆಯ ಸಂಪೂರ್ಣ ವಿವರ ಇಲ್ಲಿದೆ.

VISTARANEWS.COM


on

Money Guide
Koo

ಬೆಂಗಳೂರು: ಪಿಎಫ್ (PF) ಎಂದೂ ಕರೆಯಲ್ಪಡುವ ನೌಕರರ ಭವಿಷ್ಯ ನಿಧಿ (Employees Provident Fund-EPFಉದ್ಯೋಗಿಗಳ ಪಾಲಿಗೆ ಅತ್ಯುತ್ತಮ ನಿವೃತ್ತಿ ಉಳಿತಾಯ ಆಯ್ಕೆ ಎನಿಸಿಕೊಂಡಿದೆ. ಈ ಯೋಜನೆಯಲ್ಲಿ ಉದ್ಯೋಗಿಗಳು ಮತ್ತು ಉದ್ಯೋಗದಾತರಿಂದ ನಿರ್ದಿಷ್ಟ ಮೊತ್ತವನ್ನು ಹೂಡಿಕೆ ಮಾಡುವ ಮೂಲಕ ನೌಕರರ ಉಳಿತಾಯ ಮನೋಭಾವವನ್ನು ಉತ್ತೇಜಿಸಲಾಗುತ್ತದೆ. ಪ್ರತಿ ತಿಂಗಳು ತಮ್ಮ ಮೂಲ ವೇತನದ ಶೇ. 12ರಷ್ಟು ಕೊಡುಗೆ ನೀಡುವ ಉದ್ಯೋಗಿಗಳಿಗೆ ಈ ಯೋಜನೆಯು ಶೇ. 8.15 ಬಡ್ಡಿದರವನ್ನು ನೀಡುತ್ತದೆ. ಉದ್ಯೋಗಿಗಳು ನಿವೃತ್ತರಾದ ನಂತರ ತಮ್ಮ ಪಿಎಫ್‌ ಖಾತೆಯಲ್ಲಿ ಸಂಗ್ರಹವಾದ ಸಂಪೂರ್ಣ ಮೊತ್ತವನ್ನು ಹಿಂಪಡೆಯಬಹುದು. ಅದಾಗ್ಯೂ ಅನಾರೋಗ್ಯದಂತಹ ತುರ್ತು ಸಂದರ್ಭಗಳಲ್ಲಿ ಪಿಎಫ್ ಅಕೌಂಟ್‌ನಿಂದ ಒಂದಷ್ಟು ದುಡ್ಡು ಹಿಂಪಡೆಯಬಹುದು. ಹೀಗ ಹಣ ಹಿಂಪಡೆಯುವುದು ಈಗ ಸುಲಭ. ಕೂತಲ್ಲಿಯೇ, ಮೊಬೈಲ್‌ ಮೂಲಕವೇ ಅಪ್ಲೈ ಮಾಡಬಹುದು. ಆ ಕುರಿತಾದ ವಿವರ ಇಲ್ಲಿದೆ (Money Guide).

ಇ-ನಾಮಿನೇಷನ್‌ ಮಾಡಿಕೊಂಡಿರುವ ಪಿಎಫ್‌ ಸದಸ್ಯರು ತಮ್ಮ ಖಾತೆಯಿಂದ ಒಂದಷ್ಟು ಮೊತ್ತ, ಅಡ್ವಾನ್ಸ್‌ ಮತ್ತು ಪೆನ್ಶನ್‌ ಪಡೆಯಲು ಆನ್‌ಲೈನ್‌ ಮೂಲಕ ಅರ್ಜಿ ಸಲ್ಲಿಸಬಹುದು. ಇದಕ್ಕಾಗಿ ಇಪಿಎಫ್‌ಒ ವೆಬ್‌ಸೈಟ್‌ ಅಥವಾ ಉಮಾಂಗ್ ಆ್ಯಪ್‌ ಬಳಸಬಹುದು. ಅದರಲ್ಲಿಯೂ ಉಮಂಗ್ ಆ್ಯಪ್‌ ಅನ್ನು ಹೆಚ್ಚು ಅನುಕೂಲ ಎಂದೇ ಪರಿಗಣಿಸಲಾಗುತ್ತದೆ. ಹೀಗಾಗಿ ಇದರ ಬಳಕೆಗೆ ತಜ್ಞರು ಶಿಫಾರಸ್ಸು ಮಾಡುತ್ತಾರೆ. ಹಣ ವಿತ್‌ಡ್ರಾ ಮಾತ್ರವಲ್ಲ ಉಮಾಂಗ್ ಆ್ಯಪ್‌ ಮೂಲಕ ಬ್ಯಾಲೆನ್ಸ್‌ ಕೂಡ ಚೆಕ್‌ ಮಾಡಬಹುದು ಎನ್ನುವುದು ವಿಶೇಷ.

ಉಮಾಂಗ್ ಆ್ಯಪ್‌ ಬಳಕೆಯ ವಿಧಾನ

  • ಗೂಗಲ್‌ ಪ್ಲೇ ಸ್ಟೋರ್‌ ಅಥವಾ ಆ್ಯಪಲ್‌ ಆ್ಯಪ್‌ ಸ್ಟೋರ್‌ನಿಂದ ಉಮಂಗ್ ಆ್ಯಪ್‌ ಡೌನ್‌ಲೋಡ್‌ ಮಾಡಿ.
  • ಆ್ಯಪ್‌ ಓಪನ್‌ ಮಾಡಿ ಆಧಾರ್‌ ನಂಬರ್‌ ಮತ್ತು ಪಾಸ್‌ವರ್ಡ್‌ ಮೂಲಕ ಲಾಗಿನ್‌ ಆಗಿ.
  • ಲಾಗಿನ್‌ ಆದ ಬಳಿಕ ಸರ್ವಿಸ್‌ ಲಿಸ್ಟ್‌ನಲ್ಲಿನ EPFO ಆಯ್ಕೆ ಸೆಲೆಕ್ಟ್‌ ಮಾಡಿ.
  • ಈಗ ಪಿಎಫ್‌ ಬ್ಯಾಲನ್ಸ್‌, ನಾಮಿನೇಷನ್‌ ಅಥವಾ ಕೆವೈಸಿ ಅಪ್‌ಡೇಟ್‌ ಆಯ್ಕೆ ಕಾಣಿಸಿಕೊಳ್ಳಲಿದ್ದು, ನಿಮಗೆ ಅಗತ್ಯವಿರುವುದನ್ನು ಸೆಲೆಕ್ಟ್‌ ಮಾಡಿ.
  • ಬಳಿಕ ಸ್ಕ್ರೀನ್‌ನಲ್ಲಿ ಕಾಣಿಸುವ ಸ್ಟೆಪ್‌ ಫಾಲೋ ಮಾಡಿ.

ಹಣ ವಿತ್‌ಡ್ರಾ ಮಾಡುವ ವಿಧಾನ

  • ಉಮಂಗ್ ಆ್ಯಪ್‌ ಓಪನ್‌ ಮಾಡಿ ಆಧಾರ್‌ ನಂಬರ್‌, ಪಾಸ್‌ವರ್ಡ್‌ ನಮೂದಿಸಿ ಲಾಗಿನ್‌ ಆಗಿ.
  • ಸರ್ವಿಸ್‌ ಲಿಸ್ಟ್‌ನಲ್ಲಿನ EPFO ಆಯ್ಕೆ ಸೆಲೆಕ್ಟ್‌ ಮಾಡಿ.
  • Raise Claim ಆಯ್ಕೆಯನ್ನು ಸೆಲೆಕ್ಟ್‌ ಮಾಡಿ.
  • ಈಗ UAN ನಂಬರ್‌ ನಮೂದಿಸಿ. ಅದಾದ ಬಳಿಕ ನಿಮ್ಮ ಮೊಬೈಲ್‌ ನಂಬರ್‌ಗೆ ಬರುವ ಒಟಿಪಿಯನ್ನು ನಮೂದಿಸಿ.
  • ಯಾವ ರೀತಿಯ ವಿತ್‌ಡ್ರಾ ಅಗತ್ಯ ಎನ್ನುವುದನ್ನು ಆಯ್ಕೆ ಮಾಡಿಕೊಳ್ಳಿ
  • ಅಗತ್ಯ ಮಾಹಿತಿಗಳನ್ನು ತುಂಬಿ.

ಉಮಾಂಗ್ ಆ್ಯಪ್‌ ಮೂಲಕ ನೀವು ಪಡೆಯಬಹುದಾದ ಇತರ ಸೇವೆಗಳು

  • ಪಿಎಫ್‌ ಬ್ಯಾಲನ್ಸ್‌ ಪರಿಶೀಲನೆ
  • ಕೆವೈಸಿ ಮಾಹಿತಿಯ ಅಪ್‌ಡೇಟ್‌
  • ಪಾಸ್‌ಬುಕ್‌ ಪರಿಶೀಲನೆ
  • ಜೀವನ್‌ ಪ್ರಮಾಣ್‌ ಸರ್ಟಿಫಿಕೆಟ್‌ ಪಡೆಯಲು
  • ಪೆನ್ಶನ್‌ ಪೇಮೆಂಟ್‌ ಆರ್ಡರ್‌ (PPO) ಡೌನ್‌ಲೋಡ್‌ ಮಾಡಲು

ಇಪಿಎಫ್‌ ಖಾತೆಯ ವೈಶಿಷ್ಟ್ಯ

  • ಉದ್ಯೋಗಿಗಳ ಕೊಡುಗೆ ಸಾಮಾನ್ಯವಾಗಿ ಮೂಲ ವೇತನದ ಶೇ. 12ರಷ್ಟಿರುತ್ತದೆ.
  • ಉದ್ಯೋಗದಾತರ ಕೊಡುಗೆ ನಿಮ್ಮ ಮೂಲ ವೇತನ ಮತ್ತು ತುಟ್ಟಿಭತ್ಯೆಯ ಶೇ. 12ಕ್ಕೆ ಸಮನಾಗಿರುತ್ತದೆ. ಉದ್ಯೋಗದಾತರ ಕೊಡುಗೆಯನ್ನು ಎರಡು ಭಾಗಗಳಾಗಿ ವಿಂಗಡಿಸಲಾಗಿದೆ: ಅವೆಂದರೆ- ಇಪಿಎಫ್ ಮತ್ತು ನೌಕರರ ಪಿಂಚಣಿ ಯೋಜನೆ(ಇಪಿಎಸ್).
  • ಹೀಗೆ ನಿಮ್ಮ ಮತ್ತು ಉದ್ಯೋಗದಾತರ ಕೊಡುಗೆಗಳೊಂದಿಗೆ ಪ್ರತಿ ತಿಂಗಳು ನಿವೃತ್ತಿಗಾಗಿ ಗಣನೀಯ ಮೊತ್ತವನ್ನು ಮೀಸಲಿಡಲಾಗುತ್ತದೆ. ಇದು ಭಾರತದಲ್ಲಿ ಕಡ್ಡಾಯ.

ಇದನ್ನೂ ಓದಿ: Money Guide: ಮೊಬೈಲ್‌ನಲ್ಲಿಯೇ ಪಿಎಫ್‌ ಮೊತ್ತ ಪರಿಶೀಲಿಸಬೇಕೆ?; ಜಸ್ಟ್‌ ಹೀಗೆ ಮಾಡಿ ಸಾಕು

Continue Reading

ಮನಿ-ಗೈಡ್

Money Guide: ಮನೆಯಲಿ ಇದ್ದರೆ ಚಿನ್ನ ಈ ನಿಯಮ ಅರಿತಿರುವುದು ಚೆನ್ನ: ಗೋಲ್ಡ್‌ ಟ್ಯಾಕ್ಸ್‌ ಏನು ಹೇಳುತ್ತದೆ?

Money Guide: ಭಾರತೀಯರಿಗೆ ಚಿನ್ನಾಭರಣ ಎಂದರೆ ಬಹು ಪ್ರಿಯ. ಪ್ರಪಂಚದಲ್ಲಿ ಅತೀ ಹೆಚ್ಚು ಚಿನ್ನ ಬಳಸುವ ದೇಶಗಳ ಪೈಕಿ ಭಾರತವೂ ಒಂದು. ನಾವು ಮನೆಯಲ್ಲಿ ದಾಖಲೆ ಇಲ್ಲದೆ ಎಷ್ಟು ಬೇಕಾದರೂ ಚಿನ್ನವನ್ನು ಸಂಗ್ರಹಿಸಿ ಇಡಬಹುದಾ ಎನ್ನುವ ಪ್ರಶ್ನೆ ಉದ್ಭವಿಸುತ್ತದೆ. ಕಾನೂನು ಪ್ರಕಾರ ನಾವು ಇಟ್ಟುಕೊಳ್ಳಬಹುದಾದ ಚಿನ್ನಕ್ಕೆ ಮಿತಿ ಇದೆ. ಮಿತಿಗಿಂತ ಹೆಚ್ಚು ಚಿನ್ನವನ್ನು ಇಟ್ಟುಕೊಳ್ಳುವುದಿದ್ದರೆ ಅದರ ಲೆಕ್ಕವನ್ನು ನಾವು ಆದಾಯ ಇಲಾಖೆಗೆ ನೀಡಬೇಕಾಗುತ್ತದೆ. ಈ ಕುರಿತಾದ ಸಂಪೂರ್ಣ ವಿವರ ಇಲ್ಲಿದೆ.

VISTARANEWS.COM


on

Money Guide
Koo

ಬೆಂಗಳೂರು: ಭಾರತೀಯರಿಗೆ ಚಿನ್ನಾಭರಣ ಎಂದರೆ ಬಹು ಪ್ರಿಯ. ಪ್ರಪಂಚದಲ್ಲಿ ಅತೀ ಹೆಚ್ಚು ಚಿನ್ನ ಬಳಸುವ ದೇಶಗಳ ಪೈಕಿ ಭಾರತವೂ ಒಂದು. 2,000 ರೂ. ಮುಖಬೆಲೆಯ ನೋಟುಗಳನ್ನು ಆರ್‌ಬಿಐ ನಿಷೇಧಿಸಿದ ಬಳಿಕವಂತೂ ಚಿನ್ನದ ಆಭರಣಗಳಿಗೆ ಬೇಡಿಕೆ ಹೆಚ್ಚಾಗಿದೆ ಎಂದು ವರದಿಗಳು ತಿಳಿಸಿವೆ. ಈ ಮಧ್ಯೆ ನಾವು ಮನೆಯಲ್ಲಿ ದಾಖಲೆ ಇಲ್ಲದೆ ಎಷ್ಟು ಬೇಕಾದರೂ ಚಿನ್ನವನ್ನು ಸಂಗ್ರಹಿಸಿ ಇಡಬಹುದಾ ಎನ್ನುವ ಪ್ರಶ್ನೆ ಉದ್ಭವಿಸುತ್ತದೆ. ಕಾನೂನು ಪ್ರಕಾರ ನಾವು ಇಟ್ಟುಕೊಳ್ಳಬಹುದಾದ ಚಿನ್ನಕ್ಕೆ ಮಿತಿ ಇದೆ. ಮಿತಿಗಿಂತ ಹೆಚ್ಚು ಚಿನ್ನವನ್ನು ಇಟ್ಟುಕೊಳ್ಳುವುದಿದ್ದರೆ ಅದರ ಲೆಕ್ಕವನ್ನು ನಾವು ಆದಾಯ ಇಲಾಖೆಗೆ ನೀಡಬೇಕಾಗುತ್ತದೆ. ಹಾಗಾದರೆ ಚಿನ್ನದ ಕುರಿತಾದ ಕಾನೂನು (Gold Tax) ಏನು ಹೇಳುತ್ತದೆ? ಎಷ್ಟು ಪ್ರಮಾಣದ ಚಿನ್ನ ಸಂಗ್ರಹಿಸಿ ಇಡಬಹುದು? ನಿಮ್ಮ ಎಲ್ಲ ಪ್ರಶ್ನೆಗಳಿಗೆ ಮನಿಗೈಡ್‌ (Money Guide)ನಲ್ಲಿದೆ ಉತ್ತರ.

ನಿಯಮ ಏನು ಹೇಳುತ್ತದೆ?

ಆದಾಯ ತೆರಿಗೆ ಇಲಾಖೆಯ ತನಿಖೆಯ ಸಂದರ್ಭದಲ್ಲಿ ಖರೀದಿಸಲು ಅಥವಾ ಹೂಡಿಕೆ ಮಾಡಲು ನಿಮಗೆ ಅನುಮತಿಸಿದ ಆದಾಯದ ಮೂಲವನ್ನು ನೀವು ಹಾಜರುಪಡಿಸುವುದಾದರೆ ಮನೆಯಲ್ಲಿ ಎಷ್ಟು ಚಿನ್ನದ ಆಭರಣಗಳನ್ನು ಬೇಕಾದರೂ ಇಟ್ಟುಕೊಳ್ಳಬಹುದು. ನೇರ ತೆರಿಗೆಗಳ ಕೇಂದ್ರೀಯ ಮಂಡಳಿಯ (CBDT) ನಿಯಮಗಳ ಪ್ರಕಾರ, ಮನೆಯಲ್ಲಿರುವ ಚಿನ್ನವು ನಿಗದಿತ ಮಿತಿಯಲ್ಲಿದ್ದರೆ, ಆದಾಯ ತೆರಿಗೆ ಅಧಿಕಾರಿಗಳು ಹುಡುಕಾಟದ ಸಮಯದಲ್ಲಿ ಚಿನ್ನಾಭರಣಗಳನ್ನು ವಶಪಡಿಸಿಕೊಳ್ಳುವಂತಿಲ್ಲ (ಚಿನ್ನದ ಆಭರಣ ಸಂಗ್ರಹ ನಿಯಮ). ಆದರೆ ಮಿತಿಯನ್ನು ಮೀರಿದರೆ ಅದಕ್ಕೆ ದಾಖಲೆ ಒದಗಿಸಬೇಕು. ಹಾಗಾದರೆ ಮಿತಿಯ ಪ್ರಮಾಣವೆಷ್ಟು?

  • ಅವಿವಾಹಿತ ಮಹಿಳೆ: 250 ಗ್ರಾಂ. ಚಿನ್ನ.
  • ವಿವಾಹಿತ ಮಹಿಳೆ: 500 ಗ್ರಾಂ. ಚಿನ್ನ.
  • ವಿವಾಹಿತ / ಅವಿವಾಹಿತ ಪುರುಷ: 100 ಗ್ರಾಂ. ಚಿನ್ನ.

ʼʼವೈಯಕ್ತಿಕ ಬಳಕೆಗಾಗಿ ಅಥವಾ ಹೂಡಿಕೆಗಾಗಿ ಚಿನ್ನವು ಅತ್ಯಂತ ಜನಪ್ರಿಯ ಮತ್ತು ಬೇಡಿಕೆಯ ಲೋಹವಾಗಿ ಉಳಿದಿದೆ. ಚಿನ್ನ ಖರೀದಿಸುವಾಗ ಬೆಲೆಗಳ ಏರಿಳಿತವನ್ನು ನೋಡುವ ಜತೆಗೆ ತೆರಿಗೆಯನ್ನೂ ಗಮನಿಸಬೇಕು. ಹೂಡಿಕೆಯ ಆಯ್ಕೆಯಾಗಿ ಪರಿಗಣಿಸುವವರು ಚಿನ್ನವನ್ನು ನಾಣ್ಯಗಳು, ಆಭರಣಗಳಂತಹ ಭೌತಿಕ ರೂಪಗಳಲ್ಲಿ, ಚಿನ್ನದ ವಿನಿಮಯ-ವಹಿವಾಟು ನಿಧಿಗಳು (ಗೋಲ್ಡ್ ಇಟಿಎಫ್‌ಗಳು), ಭಾರತೀಯ ರಿಸರ್ವ್ ಬ್ಯಾಂಕ್ ನೀಡುವ ಸವರಿನ್ ಗೋಲ್ಡ್ ಬಾಂಡ್‌ಗಳು (ಎಸ್‌ಜಿಬಿ) ಮತ್ತು ಕಾಗದದ ರೂಪಗಳಲ್ಲಿ ಖರೀದಿಸಬಹುದುʼʼ ಎಂದು ಆರ್ಥಿಕ ತಜ್ಞರು ಸಲಹೆ ನೀಡುತ್ತಾರೆ.

ಚಿನ್ನ ಖರೀದಿಗೆ ಯಾವುದೇ ನೇರ ತೆರಿಗೆ ಇಲ್ಲ. ಆದಾಗ್ಯೂ ಪರೋಕ್ಷ ತೆರಿಗೆ ಪಾವತಿಸಬೇಕಾಗುತ್ತದೆ. ಇದು ಚಿನ್ನದ ಪ್ರಕಾರ ಮತ್ತು ಸಂಬಂಧಿತ ಸೇವೆಯನ್ನು ಅವಲಂಬಿಸಿ ಬದಲಾಗುತ್ತದೆ. ಉದಾಹರಣೆಗೆ ಚಿನ್ನದ ಗಟ್ಟಿಗಳು, ನಾಣ್ಯಗಳು ಮತ್ತು ಆಭರಣಗಳ ಖರೀದಿಯ ಮೇಲೆ ಶೇ. 3ರಷ್ಟು ಜಿಎಸ್‌ಟಿ ಪಾವತಿಸಬೇಕಾಗುತ್ತದೆ. ಇನ್ನು ಆಭರಣ ಮತ್ತು ಅಕ್ಕಸಾಲಿಗ ಸೇವೆಗಳ ಜಿಎಸ್‌ಟಿ ದರವು ಶೇ. 5ರಷ್ಟಿರುತ್ತದೆ. ಇದಲ್ಲದೆ ಚಿನ್ನವನ್ನು ಆಮದು ಮಾಡಿಕೊಳ್ಳುವಾಗ ಕಸ್ಟಮ್ಸ್ ಸುಂಕ, ಕೃಷಿ ಮೂಲ ಸೌಕರ್ಯ ಮತ್ತು ಅಭಿವೃದ್ಧಿ ಸೆಸ್ ಮತ್ತು ಜಿಎಸ್‌ಟಿಯನ್ನು ಪಾವತಿಸಬೇಕಾಗುತ್ತದೆ.

ʼʼಚಿನ್ನಾಭರಣ ಖರೀದಿಗೆ ಸಂಬಂಧಿಸಿ ನೇರ ತೆರಿಗೆಗಳಿಲ್ಲ. ಆದರೆ ಚಿನ್ನ ಖರೀದಿಯ ವಿವರಗಳನ್ನು ನೀವು ಒದಗಿಸುವ ಪ್ಯಾನ್ ಕಾರ್ಡ್‌ನ ಮೂಲಕ ಅಧಿಕಾರಿಗಳು ಸಂಗ್ರಹಿಸುತ್ತಾರೆ. ಆದ್ದರಿಂದ ಚಿನ್ನವನ್ನು ಭಾರಿ ಪ್ರಮಾಣದಲ್ಲಿ ಖರೀದಿಸುವಾಗ ಅದಕ್ಕೆ ತಕ್ಕದಾದ ಆದಾಯದ ಮೂಲಗಳನ್ನು ಹೊಂದಿರುವುದು ಅಗತ್ಯ. ಇನ್ನು ತೆರಿಗೆದಾರರು ಒಟ್ಟು 50 ಲಕ್ಷ ರೂ.ಗಿಂತ ಹೆಚ್ಚಿನ ಆದಾಯವನ್ನು ಹೊಂದಿದ್ದರೆ ಆದಾಯ ತೆರಿಗೆ ರಿಟರ್ನ್ಸ್‌ನಲ್ಲಿ ಹೊಂದಿರುವ ದೇಶೀಯ ಸ್ವತ್ತುಗಳ ಭಾಗವಾಗಿ ಚಿನ್ನದ ಪ್ರಮಾಣವನ್ನು ಬಹಿರಂಗಪಡಿಸಬೇಕಾಗುತ್ತದೆ.

ಮಾರಾಟ ಮಾಡುವಾಗ…

ಒಂದು ವೇಳೆ ಖರೀದಿ ಮಾಡಿದ ಬಳಿಕ ಮೂರು ವರ್ಷದ ಒಳಗೆ ಚಿನ್ನವನ್ನು ಮಾರಾಟ ಮಾಡುವುದಿದ್ದರೆ ಅದರಿಂದ ಪಡೆದ ಆದಾಯವನ್ನು ವೈಯಕ್ತಿಕ ಆದಾಯ ಎಂದು ಪರಿಗಣಿಸಲಾಗುತ್ತಿದೆ. ವೈಯಕ್ತಿಕ ಆದಾಯಕ್ಕೆ ನೀಡಬೇಕಿರುವ ತೆರಿಗೆಯೇ ಇದಕ್ಕೂ ಅನ್ವಯವಾಗುತ್ತದೆ. ಮೂರು ವರ್ಷಗಳ ನಂತರ ಚಿನ್ನವನ್ನು ಮಾರಾಟ ಮಾಡಿದರೆ, ದೀರ್ಘಾವಧಿಯ ಕ್ಯಾಪಿಟಲ್ ಗೇನ್ ತೆರಿಗೆಯನ್ನು ಪಾವತಿಸಬೇಕಾಗುತ್ತದೆ ಎನ್ನುವುದು ತಿಳಿದಿರಲಿ.

ಇದನ್ನೂ ಓದಿ: Money Guide: ಪ್ಯಾನ್‌ ಕಾರ್ಡ್‌ ಕಳೆದುಹೋದರೆ ಚಿಂತೆ ಬೇಡ; ಮನೆಯಲ್ಲೇ ಕೂತು ಡುಪ್ಲಿಕೇಟ್‌ ಪಡೆಯುವ ವಿಧಾನ ಇಲ್ಲಿದೆ

Continue Reading
Advertisement
Narendra Modi
ದೇಶ2 hours ago

PM Modi: 400 ಸೀಟು, 400 ಸೀಟು ಎಂದು ಪ್ರತಿಪಕ್ಷಗಳನ್ನು ಮಂಗ್ಯಾ ಮಾಡಿದ ಮೋದಿ; ಅವರ ಮಾತಲ್ಲೇ ಕೇಳಿ!

Rajakaluve
ಸಂಪಾದಕೀಯ3 hours ago

ವಿಸ್ತಾರ ಸಂಪಾದಕೀಯ: ಮುಂಗಾರಿಗೆ ಮುನ್ನವೇ ರಾಜಕಾಲುವೆ ಒತ್ತುವರಿ ತೆರವಾಗಲಿ

IPL 2024
ಪ್ರಮುಖ ಸುದ್ದಿ3 hours ago

IPL 2024 : ಅಭಿಮಾನಿಗಳ ದುರಂಹಕಾರವೇ ಆರ್​​ಸಿಬಿ ಸೋಲಿಗೆ ಕಾರಣ ಎಂದ ಮಾಜಿ ಕ್ರಿಕೆಟಿಗ

DCM D K Shivakumar instructed to test drinking water everywhere including Bengaluru
ಕರ್ನಾಟಕ3 hours ago

Bengaluru News: ಬೆಂಗಳೂರು ಸೇರಿದಂತೆ ಎಲ್ಲೆಡೆ ಕುಡಿಯುವ ನೀರಿನ ಪರೀಕ್ಷೆಗೆ ಸೂಚನೆ ನೀಡಿದ ಡಿ.ಕೆ.ಶಿವಕುಮಾರ್

Naxals
ದೇಶ4 hours ago

Naxals: ಛತ್ತೀಸ್‌ಗಢದಲ್ಲಿ ಭದ್ರತಾ ಸಿಬ್ಬಂದಿ ಭರ್ಜರಿ ಬೇಟೆ; 7 ನಕ್ಸಲರ ಎನ್‌ಕೌಂಟರ್

IPL 2024
ಪ್ರಮುಖ ಸುದ್ದಿ4 hours ago

IPL 2024 : ಐಪಿಎಲ್​ನಲ್ಲಿ ಕಳಪೆ ದಾಖಲೆಯೊಂದನ್ನು ಸೃಷ್ಟಿಸಿ ನಿರ್ಗಮಿಸಿದ ಆರ್​ಸಿಬಿ

arecanut price
ಕರ್ನಾಟಕ4 hours ago

Arecanut Price: ಮಲೆನಾಡಿನ ರಾಶಿ ಇಡಿ ಅಡಿಕೆ ಧಾರಣೆ ‘ಅಬ್‌ ಕಿ ಬಾರ್ ₹60,000 ಪಾರ್ ಆಗಲಿದೆಯಾ?

Self Harming Husband commits suicide for taking his wife home
ಕರ್ನಾಟಕ5 hours ago

Self Harming: ಹೆಂಡತಿಯನ್ನು ತವರು ಮನೆಗೆ ಕರೆದುಕೊಂಡು ಹೋಗಿದ್ದಕ್ಕೆ ಪತಿ ಆತ್ಮಹತ್ಯೆ!

WhatsApp AI
ತಂತ್ರಜ್ಞಾನ5 hours ago

WhatsApp AI: WhatsAppಗೂ ಬಂತು ಎಐ; ನಿಮ್ಮ ಪ್ರೊಫೈಲ್‌ ಫೋಟೊ ಇನ್ನು AI ಜನರೇಟೆಡ್!‌

T20 world cup 2024
ಕ್ರೀಡೆ5 hours ago

T20 World Cup 2024 : ಭಾರತ ತಂಡ ವಿಶ್ವ ಕಪ್​ ಗೆಲ್ಲುವುದಿಲ್ಲ; ಇಂಗ್ಲೆಂಡ್​ ಮಾಜಿ ಆಟಗಾರನ ಭವಿಷ್ಯ

Sharmitha Gowda in bikini
ಕಿರುತೆರೆ8 months ago

Geetha Serial Kannada: ನಿದ್ದೆ ಕದ್ದ ಚೋರಿ! ನಟಿ `ಭಾನುಮತಿ’ ಹಾಟ್‌ ಪೋಟೊಗಳಿಗೆ ಫ್ಯಾನ್ಸ್ ಫುಲ್ ಫಿದಾ

Kannada Serials
ಕಿರುತೆರೆ7 months ago

Kannada Serials TRP: 2ನೇ ಸ್ಥಾನದಲ್ಲಿ 2 ಧಾರಾವಾಹಿಗಳು; ಟಿಆರ್‌ಪಿ ರೇಸ್‌ನಲ್ಲಿಲ್ಲ ಭಾಗ್ಯಲಕ್ಷ್ಮೀ!

Bigg Boss- Saregamapa 20 average TRP
ಕಿರುತೆರೆ7 months ago

Kannada Serials TRP: ಏಳನೇ ಸ್ಥಾನಕ್ಕೆ ʻಅಮೃತಧಾರೆʼ ಕುಸಿತ; ಬಿಗ್‌ ಬಾಸ್‌-ಸರಿಗಮಪ ಟಿಆರ್‌ಪಿ ಎಷ್ಟು?

galipata neetu
ಕಿರುತೆರೆ6 months ago

Kanyadana Serial: ಕಿರುತೆರೆಗೆ ಮತ್ತೆ ಎಂಟ್ರಿ ಕೊಟ್ಟ ʻಗಾಳಿಪಟʼ ಖ್ಯಾತಿಯ ʻನೀತುʼ!

Kannada Serials
ಕಿರುತೆರೆ8 months ago

Kannada Serials TRP: ನಾಲ್ಕನೇ ಸ್ಥಾನಕ್ಕೆ ಕುಸಿತ ಕಂಡ ʻಸೀತಾ ರಾಮʼ; ಟಿಆರ್‌ಪಿ ರೇಸ್‌ಗೆ ʻಭಾಗ್ಯಲಕ್ಷ್ಮಿʼ ಬ್ಯಾಕ್‌!

Kannada Serials
ಕಿರುತೆರೆ8 months ago

Kannada Serials TRP: ಟಿಆರ್‌ಪಿಯಲ್ಲಿ ʻಭಾಗ್ಯಲಕ್ಷ್ಮೀʼ ಹವಾ; ʻಪುಟ್ಟಕ್ಕನ ಮಕ್ಕಳುʼ ಧಾರಾವಾಹಿಗೆ ಸಂಕಷ್ಟ!

Bigg Boss' dominates TRP; Sita Rama fell to the sixth position
ಕಿರುತೆರೆ7 months ago

Kannada Serials TRP: ಟಿಆರ್‌ಪಿಯಲ್ಲಿ ʻಬಿಗ್ ಬಾಸ್ʼದೇ ಮೇಲುಗೈ; 6ನೇ ಸ್ಥಾನಕ್ಕೆ ಕುಸಿದ ʻಸೀತಾ ರಾಮʼ

geetha serial Dhanush gowda engagement
ಕಿರುತೆರೆ5 months ago

Dhanush Gowda: ಗೀತಾ ಧಾರಾವಾಹಿ ನಟನ ನಿಶ್ಚಿತಾರ್ಥ; ಭವ್ಯಾಳ ಕಮೆಂಟ್‌ ಬಾಕ್ಸ್‌ ಆಫ್‌!

varun
ಕಿರುತೆರೆ6 months ago

Brindavana Serial: ʼಬೃಂದಾವನʼ ಧಾರಾವಾಹಿಯಲ್ಲಿ ದೊಡ್ಡ ಟ್ವಿಸ್ಟ್‌; ಪ್ರಮುಖ ಪಾತ್ರಧಾರಿಯೇ ಬದಲು

Kannada Serials
ಕಿರುತೆರೆ8 months ago

Kannada Serials TRP: ಟಿಆರ್‌ಪಿಯಲ್ಲಿ ಏರಿಕೆ ಕಂಡ ʻಅಮೃತಧಾರೆʼ; ʻಗಟ್ಟಿಮೇಳʼಕ್ಕೆ ನಾಲ್ಕನೇ ಸ್ಥಾನ!

dina bhavishya read your daily horoscope predictions for May 23 2024
ಭವಿಷ್ಯ21 hours ago

Dina Bhavishya : 12 ರಾಶಿಯವರ ಇಂದಿನ ಭವಿಷ್ಯ ಹೇಗಿದೆ? ಯಾರಿಗೆ ಶುಭ, ಯಾರಿಗೆ ಅಶುಭ ಫಲ?

Karnataka Weather Forecast
ಮಳೆ2 days ago

Karnataka Weather : ಮುಂದುವರಿಯಲಿದೆ ವರುಣಾರ್ಭಟ; ಬೆಂಗಳೂರಲ್ಲೂ ಭಾರಿ ಮಳೆ ನಿರೀಕ್ಷೆ!

Karnataka Rain
ಮಳೆ2 days ago

Karnataka Rain : ಭಾರಿ ಮಳೆಗೆ ಕರೆಂಟ್‌ ಕಟ್‌, ಕತ್ತಲಲ್ಲೇ ರೋಗಿಗಳಿಗೆ ಟ್ರೀಟ್‌ಮೆಂಟ್‌; ಮರ ಬಿದ್ದರೂ ಪಾರಾದ ತಾಯಿ-ಮಗ

Love Case Father throws hot water on man who loved his daughter for coming home
ಕೊಡಗು3 days ago

Love Case : ಮನೆಗೆ ಬಂದ ಪ್ರೇಮಿಗೆ ಕೊತ ಕೊತ ಕುದಿಯುವ ನೀರು ಎರಚಿದ ಯುವತಿ ತಂದೆ!

Contaminated Water
ಮೈಸೂರು3 days ago

Contaminated Water : ಡಿ ಸಾಲುಂಡಿಯಲ್ಲಿ ಕಲುಷಿತ ನೀರು ಸೇವಿಸಿ ಅಸ್ವಸ್ಥಗೊಂಡಿದ್ದ ಯುವಕ ಸಾವು

Karnataka Rain
ಮಳೆ4 days ago

Karnataka Rain : ಬಂಗಾಳ ಕೊಲ್ಲಿಯಲ್ಲಿ ವಾಯುಭಾರ ಕುಸಿತ; ಸಮುದ್ರಕ್ಕಿಳಿಯದಂತೆ ಮೀನುಗಾರರಿಗೆ ಎಚ್ಚರಿಕೆ

Karnataka Rain
ಮಳೆ4 days ago

Karnataka Rain : ಒಂದೇ ಮಳೆಗೆ ಹೊಳೆಯಂತಾದ ಬೆಂಗಳೂರು ರಸ್ತೆಗಳು! ಕಳಸದಲ್ಲೂ ಮುಂದುವರಿದ ಅಬ್ಬರ

Karnataka rain
ಮಳೆ4 days ago

Karnataka Rain : ವಿಜಯನಗರದಲ್ಲಿ ಸಿಡಿಲಿಗೆ ಜಾನುವಾರು ಬಲಿ; ಬೆಂಗಳೂರು ಸೇರಿ ಹಲವೆಡೆ ಭಾರಿ ಮಳೆ

Karnataka Rain
ಮಳೆ5 days ago

Karnataka Rain: ಧಾರಾಕಾರ ಮಳೆಗೆ ಕಾಂಪೌಂಡ್ ಕುಸಿದು 4 ಬೈಕ್‌ಗಳು ಜಖಂ; ಮದುವೆ ಮಂಟಪಕ್ಕೆ ನುಗ್ಗಿದ ನೀರು‌

Prajwal Revanna Case JDS calls CD Shivakumar pen drive gang
ರಾಜಕೀಯ6 days ago

Prajwal Revanna Case: CD ಶಿವಕುಮಾರ್ ಪೆನ್ ಡ್ರೈವ್ ಗ್ಯಾಂಗ್ ಎಂದ ಕುಟುಕಿದ ಜೆಡಿಎಸ್‌!

ಟ್ರೆಂಡಿಂಗ್‌