Hanuman Chalisa: ನಗರ್ತಪೇಟೆಯಲ್ಲಿ ಹಿಂದೂ ಯುವಕನ ಮೇಲಿನ ಹಲ್ಲೆಗೆ ಪ್ರಕಾಶ್ ರೈ ಪ್ರತಿಕ್ರಿಯೆ ಹೀಗಿದೆ! - Vistara News

ಬೆಂಗಳೂರು

Hanuman Chalisa: ನಗರ್ತಪೇಟೆಯಲ್ಲಿ ಹಿಂದೂ ಯುವಕನ ಮೇಲಿನ ಹಲ್ಲೆಗೆ ಪ್ರಕಾಶ್ ರೈ ಪ್ರತಿಕ್ರಿಯೆ ಹೀಗಿದೆ!

Hanuman Chalisa: ನಗರ್ತಪೇಟೆಯಲ್ಲಿನ ಹಲ್ಲೆ ಪ್ರಕರಣವನ್ನು ನಟ ಪ್ರಕಾಶ್‌ ರೈ ಖಂಡಿಸಿದ್ದಾರೆ. ಯಾವುದೇ ಧರ್ಮದವರು ಈ ರೀತಿ ಮಾಡಿದರೂ ಅಕ್ಷಮ್ಯ ಎಂದು ಕಿಡಿಕಾರಿದ್ದಾರೆ. ಆದರೆ, ಅವರ ಈ ಪ್ರತಿಕ್ರಿಯೆಗೆ ನೆಟ್ಟಿಗರು ಅಚ್ಚರಿ ವ್ಯಕ್ತಪಡಿಸಿದ್ದಾರೆ. ಪ್ರಕಾಶ್‌ ರೈ ಎಕ್ಸ್‌ ಅಕೌಂಟ್‌ ಹ್ಯಾಕ್‌ ಆಗಿದೆಯಾ ಎಂದು ಪ್ರಶ್ನೆ ಮಾಡಿದ್ದಾರೆ.

VISTARANEWS.COM


on

Hanuman Chalisa Prakash Raj reacted to the attack on a Hindu youth in Nagarthapet
ಮಹತ್ವದ, ಕುತೂಹಲಕರ ಸುದ್ದಿಗಾಗಿ ಫಾಲೊ ಮಾಡಿ
Koo

ಬೆಂಗಳೂರು: ಹಿಂದುತ್ವ, ಪ್ರಧಾನಿ ನರೇಂದ್ರ ಮೋದಿ (PM Narendra Modi) ಅವರ ನಡೆ ಬಗ್ಗೆ ಆಗಾಗ ಕಿಡಿಕಾರುತ್ತಲೇ ಬರುತ್ತಿರುವ ನಟ ಪ್ರಕಾಶ್‌ ರೈ ಈ ಬಾರಿ ಹಿಂದು ಯುವಕನ ಮೇಲೆ ಹಲ್ಲೆ ನಡೆಸಿದ ಆರೋಪಿಗಳನ್ನು ಬಂಧಿಸಬೇಕು ಎಂದು ಹೇಳಿದ್ದಾರೆ. ಮೊಬೈಲ್‌ ಅಂಗಡಿಯೊಂದರಲ್ಲಿ ಹನುಮಾನ್‌ ಚಾಲೀಸಾ (Hanuman Chalisa) ಹಾಕಿದ್ದಕ್ಕೆ ಅಂಗಡಿಯಾತನ ಮೇಲೆ ಹಲ್ಲೆ (assault case) ಮಾಡಿದ ಕೃತ್ಯವನ್ನು ರೈ ಖಂಡಿಸಿದ್ದಾರೆ. ಈ ಘಟನೆಯನ್ನು ಯಾರೇ ಮಾಡಿದ್ದರೂ ಖಂಡನೀಯ ಎಂದು ಹೇಳಿದ್ದಾರೆ. ಆದರೆ, ಇದಕ್ಕೆ ನೆಟ್ಟಿಗರು ಅಚ್ಚರಿ ವ್ಯಕ್ತಪಡಿಸಿದ್ದಾರೆ. ಪ್ರಕಾಶ್‌ ರೈ ಅಕೌಂಟ್‌ ಹ್ಯಾಕ್‌ ಆಗಿರಬೇಕು, ಹೀಗೆ ಹಿಂದುಗಳ ಪರವಾಗಿ ನೀವು ನಿಂತರೆ, ಶಾಂತಿ ಪ್ರಿಯರ ಬೆಂಬಲ ನಿಮಗೆ ಸಿಗದೇ ಹೋಗಬಹುದು ಎಂದು ಕಾಲೆಳೆದಿದ್ದಾರೆ.

ಈ ಬಗ್ಗೆ ಸೋಷಿಯಲ್‌ ಮೀಡಿಯಾ ಎಕ್ಸ್‌ನಲ್ಲಿ ಪೋಸ್ಟ್‌ ಮಾಡಿರುವ ಪ್ರಕಾಶ್‌ ರೈ, ನಗರ್ತಪೇಟೆಯಲ್ಲಿನ ಹಲ್ಲೆ ಪ್ರಕರಣವನ್ನು ಕಟುವಾಗಿ ಖಂಡಿಸಿದ್ದಾರೆ. ಇದೊಂದು ಗೂಂಡಾ ವರ್ತನೆಯಾಗಿದ್ದು, ಸಹಿಸಲು ಅಸಾಧ್ಯ. ಯಾವುದೇ ಧರ್ಮದವರು ಈ ರೀತಿ ಮಾಡಿದರೂ ಅಕ್ಷಮ್ಯ ಎಂದು ಕಿಡಿಕಾರಿದ್ದಾರೆ.

ಪ್ರಕಾಶ್‌ ರೈ ಟ್ವೀಟ್‌ನಲ್ಲೇನಿದೆ?

“ಈ ಗೂಂಡಾಗಳನ್ನು ಬಂಧಿಸಿ ಶಿಕ್ಷೆಗೆ ಗುರಿಪಡಿಸಬೇಕು. ಯಾವುದೇ ಧರ್ಮದ ಯಾವುದೇ ವ್ಯಕ್ತಿಯಿಂದ ಇಂತಹ ಗೂಂಡಾಗಿರಿ ಕೃತ್ಯಗಳು ನಡೆದರೂ ಅದನ್ನು ಯಾವುದೇ ಕಾರಣಕ್ಕೂ ಸಹಿಸಬಾರದು” ಎಂದು #justasking ಹ್ಯಾಷ್‌ಟ್ಯಾಗ್‌ ಮೂಲಕ ಪ್ರಕಾಶ್‌ ರೈ ಪೋಸ್ಟ್‌ ಮಾಡಿದ್ದರು.

ಅಚ್ಚರಿ ಹೊರಹಾಕಿದ ನೆಟ್ಟಿಗರು

ಪ್ರಕಾಶ್‌ ರೈ ಅವರ ಈ ಟ್ವೀಟ್‌ಗೆ ಕೆಲವರು ಅಚ್ಚರಿ ವ್ಯಕ್ತಪಡಿಸಿದ್ದಾರೆ. ಇದು ನಿಜವಾಗಿಯೂ ಪ್ರಕಾಶ್‌ ರೈ ಅವರೇನಾ ಎಂದು ಪ್ರಶ್ನೆ ಮಾಡಿದ್ದಾರೆ. ಮಗದೊಬ್ಬರು ಪ್ರತಿಕ್ರಿಯೆ ನೀಡಿ, “ನಿಮ್ಮ ಖಾತೆಯನ್ನು ಹ್ಯಾಕ್ ಮಾಡಲಾಗಿದೆ ಎಂದು ಅನ್ನಿಸುತ್ತಿದೆ. ಏಕೆಂದರೆ ಹಲ್ಲೆಗೊಳಗಾದ ಅಂಗಡಿಯ ಮಾಲೀಕ ಒಬ್ಬ ಹಿಂದು ಆಗಿದ್ದಾನೆ’ ಎಂದು ಕಾಲೆಳೆದಿದ್ದಾರೆ. ಮತ್ತೆ ಕೆಲವರು “ಇದು ಮೋಸ” (ಚೀಟಿಂಗ್‌ ಕರ್ತಾ ಹೈ ತೂ) ಎಂದು ವ್ಯಂಗ್ಯವಾಡಿದ್ದಾರೆ.

“ಸರ್ ದಯವಿಟ್ಟು ಹಾಗೆ ಮಾಡಬೇಡಿ. ಇಲ್ಲದಿದ್ದರೆ ಶಾಂತಿಯುತ ಸಮುದಾಯವು ನಿಮ್ಮನ್ನು ಬೆಂಬಲಿಸುವುದನ್ನು ನಿಲ್ಲಿಸಿಬಿಡುತ್ತದೆ” ಎಂದು ಸ್ಮೈಲಿಂಗ್‌ ಇಮೋಜಿ ಹಾಕಿ ಕುಟುಕಿದ್ದಾರೆ. ಅಲ್ಲದೆ, “ನೀವು ಈಗ ಸಂತ್ರಸ್ತ ಮಾತನಾಡುತ್ತಿರುವ ವಿಡಿಯೊವನ್ನು ಹಾಕುವುದಲ್ಲ, ಆತನ ಮೇಲೆ ದಾಳಿ ಮಾಡುತ್ತಿರುವ ವಿಡಿಯೊವನ್ನು ಪೋಸ್ಟ್‌ ಮಾಡಬೇಕಿತ್ತು, ನಾಚಿಕೆಯಾಗಬೇಕು ನಿಮಗೆ ಎಂದು ಇನ್ನೊಂದು ಕಮೆಂಟ್‌ನಲ್ಲಿ ಹಾಕಲಾಗಿದೆ. ಆದರೆ, ಮತ್ತೆ ಕೆಲವರು ಪ್ರಕಾಶ್‌ ರೈ ಬೆಂಬಲಕ್ಕೆ ನಿಂತಿದ್ದಾರೆ. ನಿಜವಾದ ಭಾರತೀಯರು ಸದಾ ಭಾರತದ ಪ್ರಜಾಪ್ರಭುತ್ವನ್ನು ಗೌರವಿಸುತ್ತಾರೆ” ಎಂದು ಒಬ್ಬರು ಹೇಳಿದ್ದಾರೆ.

ಏನಿದು ಹಲ್ಲೆ ಪ್ರಕರಣ?

ಭಾನುವಾರ ಸಾಯಂಕಾಲ 6.15ರ ಸುಮಾರಿಗೆ ಐದು ಮಂದಿ ನಗರ್ತಪೇಟೆಯಲ್ಲಿನ ಮೊಬೈಲ್‌ ಅಂಗಡಿಗೆ ಬಂದಿದ್ದಾರೆ. ಅಲ್ಲಿ ಹಿಂದು ದೇವರ ಭಜನೆ ಹಾಕಿದ್ದರಿಂದ ಬಂದ್‌ ಮಾಡಲು ಹೇಳಿದ್ದಾರೆ. ಅದಕ್ಕೆ ಅಂಗಡಿಯಾತ ಮುಖೇಶ್‌, ನನ್ನ ಅಂಗಡಿ ನನ್ನ ಇಷ್ಟ ಎಂದು ವಿರೋಧ ಮಾಡಿದ್ದಾರೆ. ಇದರಿಂದ ಸಿಟ್ಟಿಗೆದ್ದ ಯುವಕರ ಗುಂಪು ಮುಖೇಶ್‌ ಮೇಲೆ ದಾಳಿ ಮಾಡಿದ್ದಾರೆ. ಮುಖೇಶ್‌ ಸಹ ಆವೇಶದಿಂದ ಪ್ರತಿದಾಳಿ ಮಾಡಿದ್ದಾರೆ. ಆದರೆ, ಆರೋಪಿಗಳು ನಾಲ್ಕೈದು ಮಂದಿ ಇದ್ದಿದ್ದರಿಂದ ಮುಖೇಶ್‌ ಮೇಲೆ ಮಾರಣಾಂತಿಕವಾಗಿ ಹಲ್ಲೆ ಮಾಡಿದ್ದಾರೆ. ಈ ಎಲ್ಲ ದೃಶ್ಯಾವಳಿಗಳು ಸಿಸಿಟಿವಿ ಕ್ಯಾಮೆರಾದಲ್ಲಿ ಸೆರೆಯಾಗಿದೆ. ಈ ಪ್ರಕರಣ ಸಂಬಂಧ ದೂರು ದಾಖಲಾಗಿದ್ದು, ಈವರೆಗೆ ಒಟ್ಟು ಐದು ಜನ ಆರೋಪಿಗಳನ್ನು ಪೊಲೀಸರು ವಶಕ್ಕೆ ಪಡೆದುಕೊಂಡು ವಿಚಾರಣೆ ನಡೆಸುತ್ತಿದ್ದಾರೆ.

ಪ್ರತಿಭಟನೆ ನಡೆಸಿ ಕೈಬಿಟ್ಟ ಬಿಜೆಪಿ

ಈ ಸಂಬಂಧ ತಪ್ಪಿತಸ್ಥರನ್ನು ಬಂಧಿಸಿ ಕಠಿಣ ಶಿಕ್ಷೆಗೆ ಒಳಪಡಿಸಬೇಕು ಎಂದು ಆಗ್ರಹಿಸಿ ಬಿಜೆಪಿ (BJP Karnataka) ಬೃಹತ್‌ ಪ್ರತಿಭಟನೆ ನಡೆಸಿತ್ತು. ಸಂಸದ ತೇಜಸ್ವಿ ಸೂರ್ಯ (Tejasvi Surya) ಹಾಗೂ ಕೇಂದ್ರ ಸಚಿವೆ ಶೋಭಾ ಕರಂದ್ಲಾಜೆ (Shobha Karandlaje) ನೇತೃತ್ವದಲ್ಲಿ ಪ್ರತಿಭಟನೆ ನಡೆದಿದ್ದು, ಘಟನಾ ಸ್ಥಳದಲ್ಲಿ ಜೈ ಶ್ರೀರಾಮ್‌ (Jai Shriram) ಘೋಷಣೆ ಕೂಗಲಾಗಿತ್ತು. ಶೋಭಾರನ್ನು ಪೊಲೀಸರು ವಶಕ್ಕೆ ಪಡೆದುಕೊಂಡಿದ್ದರು. ತೇಜಸ್ವಿ ಸೂರ್ಯ ಅವರು ಪೊಲೀಸರಿಗೆ ಗುರುತು ಸಿಗದಂತೆ ಕ್ಯಾಪ್‌ ಹಾಗೂ ಮುಖಕ್ಕೆ ಮಾಸ್ಕ್‌ ಹಾಕಿಕೊಂಡು ಸ್ಥಳಕ್ಕೆ ಬಂದಿದ್ದರು. ಸಾವಿರಾರು ಸಂಖ್ಯೆಯಲ್ಲಿ ಹಿಂದುಗಳು ಸೇರಿ ಪ್ರತಿಭಟನೆಯನ್ನು ನಡೆಸಿದ್ದರು. ಆಗ ಪೊಲೀಸ್‌ ಹಿರಿಯ ಅಧಿಕಾರಿಗಳು ಕ್ರಮ ಕೈಗೊಳ್ಳುವ ಭರವಸೆ ನೀಡಿದ್ದರಿಂದ ತಾತ್ಕಾಲಿಕವಾಗಿ ಪ್ರತಿಭಟನೆಯನ್ನು ವಾಪಸ್‌ ಪಡೆಯಲಾಗಿದೆ.

ಕ್ಷಣ ಕ್ಷಣದ ಮಾಹಿತಿಗಾಗಿ Vistara News FaceBook ಪೇಜ್ ಫಾಲೋ ಮಾಡಿ
ಮಹತ್ವದ ಮಾಹಿತಿಗಾಗಿ ವಿಸ್ತಾರ ನ್ಯೂಸ್ ಆ್ಯಪ್ ಉಚಿತವಾಗಿ ಡೌನ್ ಲೋಡ್ ಮಾಡಿಕೊಳ್ಳಿ: Andriod App | IOS App
Continue Reading
Click to comment

Leave a Reply

Your email address will not be published. Required fields are marked *

ಕರ್ನಾಟಕ

Murder Case: ಬೆಂಗಳೂರಿನಲ್ಲಿ ಒಂಟಿ ಮಹಿಳೆಯ ಕತ್ತು ಹಿಸುಕಿ ಕೊಲೆ; ಮನೆ ಬಾಡಿಗೆ ಕೇಳುವ ನೆಪದಲ್ಲಿ ಕೃತ್ಯ

Murder Case: ಬೆಂಗಳೂರು ಹೊರವಲಯದ ಕೆಂಗೇರಿ ಪೊಲೀಸ್ ಠಾಣಾ ವ್ಯಾಪ್ತಿಯ ಕೋನಸಂದ್ರದಲ್ಲಿ ಮಹಿಳೆಯ ಹತ್ಯೆ ನಡೆದಿದೆ. ಮಹಿಳೆಯ ಕತ್ತು ಹಿಸುಕಿ ಕೊಲೆ ಮಾಡಿದ ಬಳಿಕ ಆಕೆಯ ಚಿನ್ನದ ಸರವನ್ನು ಕದ್ದು ದುಷ್ಕರ್ಮಿ ಪರಾರಿಯಾಗಿದ್ದಾನೆ.

VISTARANEWS.COM


on

Murder Case
Koo

ಬೆಂಗಳೂರು: ಒಂಟಿ ಮಹಿಳೆಯ ಕತ್ತು ಹಿಸುಕು ಕೊಲೆ‌ (Murder Case) ಮಾಡಿರುವ ಘಟನೆ ನಗರದ ಹೊರವಲಯದ ಕೆಂಗೇರಿ ಪೊಲೀಸ್ ಠಾಣಾ ವ್ಯಾಪ್ತಿಯ ಕೋನಸಂದ್ರದಲ್ಲಿ ನಡೆದಿದೆ. ಮನೆ ಬಾಡಿಗೆ ಕೇಳುವ ನೆಪದಲ್ಲಿ ದುಷ್ಕರ್ಮಿಯೊಬ್ಬ ಕೃತ್ಯ ಎಸಗಿದ್ದಾರೆ. ಸ್ಥಳಕ್ಕೆ ಕೆಂಗೇರಿ ಪೊಲೀಸರು ಭೇಟಿ ನೀಡಿ ಪರಿಶೀಲನೆ ನಡೆಸಿದ್ದಾರೆ.

ದಿವ್ಯಾ (32) ಕೊಲೆಯಾದ ಮಹಿಳೆ. ಮಹಿಳೆಯ ಗಂಡ ಗುರುಮೂರ್ತಿ ಕೆಲಸಕ್ಕೆಂದು ಸಲೂನ್‌ ಹೋಗಿದ್ದರು. ಈ ವೇಳೆ ಆರೋಪಿ, ಮಹಿಳೆಯ ಕತ್ತು ಹಿಸುಕಿ ಕೊಲೆಗೈದು ಕುತ್ತಿಯಲ್ಲಿದ್ದ ಚೈನ್ ಕದ್ದು ಪರಾರಿಯಾಗಿದ್ದಾನೆ. ಮಹಿಳೆಯ ಮೃತದೇಹವನ್ನು ಆರ್.ಆರ್. ಆಸ್ಪತ್ರೆಗೆ ರವಾನಿಸಲಾಗಿದೆ.

ಇದನ್ನೂ ಓದಿ | Absence Video: ಅಶ್ಲೀಲ ವಿಡಿಯೋ ಶೇರ್‌, ಅಪ್ಲೋಡ್‌ ಮಾಡುತ್ತಿದ್ದ ಪ್ರಜ್ವಲ್‌ ಮೇಲೆ ಕುದುರೆಮುಖದಲ್ಲಿ ಕೇಸ್‌ ದಾಖಲು!

ಪ್ರೀತಿಸಲು ಓಕೆ, ಮದುವೆಗೆ ನೋ ಎಂದ ಪ್ರಿಯಕರ; ಮನನೊಂದು ಯುವತಿ ಆತ್ಮಹತ್ಯೆ

ಕಲಬುರಗಿ: ಪ್ರಿಯಕರ ಮದುವೆಗೆ ನಿರಾಕರಿಸಿದ್ದಕ್ಕೆ ಯುವತಿ ಮನನೊಂದು ಆತ್ಮಹತ್ಯೆ (Self Harming) ಮಾಡಿಕೊಂಡಿರುವ ಘಟನೆ ಜಿಲ್ಲೆಯ ಕೋಟನೂರು (ಡಿ) ಬಳಿ ಶುಕ್ರವಾರ ನಡೆದಿದೆ.

ಪುಷ್ಪಾ (26) ನೇಣು ಬಿಗಿದುಕೊಂಡು ಆತ್ಮಹತ್ಯೆ ಮಾಡಿಕೊಂಡ ಯುವತಿ. ಕಲಬುರಗಿ ಜಿಲ್ಲೆಯ ಆಳಂದ ತಾಲೂಕಿನ ಕೌಲಗಾ ಗ್ರಾಮದ ಪುಷ್ಪಾ ಪದವಿ ವ್ಯಾಸಂಗ ಮುಗಿಸಿದ್ದು, ಆಳಂದ ತಾಲೂಕಿನ ಕೌಲಗಾ ಗ್ರಾಮದಿಂದ ಕಲಬುರಗಿ ನಗರಕ್ಕೆ ಬಂದು ಸ್ಪರ್ಧಾತ್ಮಕ ಪರೀಕ್ಷೆಗಳಿಗೆ ಸಿದ್ಧತೆ ಮಾಡಿಕೊಳ್ಳುತ್ತಿದ್ದಳು. ಹೀಗಾಗಿ ಕೋಟನೂರು ಬಳಿ ಬಾಡಿಗೆ ರೂಮ್‌ ಪಡೆದು ವಾಸವಾಗಿದ್ದಳು. ಈಕೆಯು ಕಳೆದ ನಾಲ್ಕು‌ ವರ್ಷದಿಂದ ಕಲಬುರಗಿಯ ಗಾಂಧಿನಗರದ ನಿವಾಸಿ ಕಿರಣ್ ಎಂಬುವರೊಂದಿಗೆ ಪರಸ್ಪರ ಪ್ರೀತಿಸುತ್ತಿದ್ದರು ಎಂದು ತಿಳಿದುಬಂದಿದೆ.

ಇದನ್ನೂ ಓದಿ: Tata Motors: Tata Ace EV 1000 ಬಿಡುಗಡೆ ಮಾಡಿದ ಟಾಟಾ ಮೋಟರ್ಸ್‌; ಏನಿದರ ವಿಶೇಷತೆ? ದರ ಎಷ್ಟು?

ಕಳೆದ ಕೆಲ ದಿನಗಳಿಂದ ಮೃತ ಯುವತಿ ಪುಷ್ಪಾ, ಕಿರಣ್‌ನನ್ನು‌ ಮದುವೆ ಮಾಡಿಕೊಳ್ಳುವಂತೆ ಒತ್ತಾಯ ಮಾಡುತ್ತಿದ್ದಳು. ಆದರೆ ಕಿರಣ್ ಸದ್ಯ ಈಗಲೇ ಬೇಡ ಎಂದು ನಿರಾಕರಣೆ ಮಾಡಿದ್ದ. ಇದರಿಂದ ಆಕೆ ಬೇಸರಗೊಂಡಿದ್ದಳು ಎನ್ನಲಾಗಿದೆ. ಶುಕ್ರವಾರ ಬೆಳಗ್ಗೆಯಿಂದ ರೂಮ್‌ನಿಂದ ಹೊರ ಬಾರದ ಪುಷ್ಪಾಳ‌ ಮೇಲೆ ಅನುಮಾನಗೊಂಡು ಪಕ್ಕದ‌ ಮನೆಯವರು ರೂಮ್‌ಗೆ ಬಂದು ನೋಡಿದಾಗ ನೇಣು ಬಿಗಿದುಕೊಂಡು‌ ಆತ್ಮಹತ್ಯೆ ಮಾಡಿಕೊಂಡಿರುವುದು ತಿಳಿದುಬಂದಿದೆ. ಕೂಡಲೇ ವಿಶ್ವವಿದ್ಯಾಲಯ ಪೊಲೀಸರಿಗೆ ಮಾಹಿತಿ ನೀಡಿದ್ದಾರೆ. ಘಟನಾ ಸ್ಥಳಕ್ಕೆ ಪೊಲೀಸರು ಭೇಟಿ ನೀಡಿ ಪರಿಶೀಲನೆ ನಡೆಸಿದ್ದಾರೆ. ಈ ಕುರಿತು ವಿಶ್ವವಿದ್ಯಾಲಯ ಪೊಲೀಸ್ ಠಾಣೆಯಲ್ಲಿ ಪ್ರಕರಣ ದಾಖಲಾಗಿದೆ.

Self Harming : ಕೊಡಗಿನಲ್ಲಿ ಬಾಲಕಿಯ ರುಂಡ ಕತ್ತರಿಸಿದ್ದ ಪ್ರೇಮಿ ನೇಣಿಗೆ ಶರಣು

ಯುವಕನೊಬ್ಬ ಬಾಲಕಿಯನ್ನು ಎಳೆದೊಯ್ದು ರುಂಡ ಕತ್ತರಿಸಿ ಕೊಲೆ (Murder Case) ಮಾಡಿದ್ದ. ಈ ಘಟನೆಯಿಂದ ಕೊಡಗಿನ ಸೋಮವಾರಪೇಟೆಯ ಸುರ್ಲಬ್ಬಿ ಗ್ರಾಮಸ್ಥರು ಬೆಚ್ಚಿಬಿದ್ದಿದ್ದರು. ಮೀನಾ ಎಂಬಾಕೆಯನ್ನು ಕೊಲೆ ಮಾಡಿ ತಲೆಮರೆಸಿಕೊಂಡಿದ್ದ ಆರೋಪಿಗಾಗಿ ಪೊಲೀಸರು ಹುಡುಕಾಟ ನಡೆಸುತ್ತಿದ್ದರು. ಇದೇ ವೇಳೆ ಆರೋಪಿ ಪ್ರಕಾಶ್‌ ತನ್ನ ಮನೆಯ ಸಮೀಪದಲ್ಲೆ ನೇಣಿಗೆ (Self Harming) ಶರಣಾಗಿದ್ದಾನೆ. ಕೊಡಗು ಜಿಲ್ಲೆಯ ಸೋಮವಾರಪೇಟೆ ತಾಲ್ಲೂಕಿನ ಹಮ್ಮಿಯಾಲದಲ್ಲಿ ಘಟನೆ ನಡೆದಿದೆ.

ಬಾಲಕಿಯ ಹತ್ಯೆ ಪ್ರಕರಣದ ಆರೋಪಿ ಪ್ರಕಾಶ್‌ ರುಂಡ ಸಮೇತ ನಾಪತ್ತೆಯಾಗಿದ್ದ. ಆದರೆ ಶುಕ್ರವಾರ ಆತನ ಮನೆಯ ಸಮೀಪದಲ್ಲೇ ನೇಣು ಬಿಗಿದ ಸ್ಥಿತಿಯಲ್ಲಿ ಮೃತದೇಹವು ಪತ್ತೆಯಾಗಿದೆ. ಆದರೆ ಪ್ರಕಾಶ್ ತೆಗೆದುಕೊಂಡು ಹೋಗಿದ್ದ ಬಾಲಕಿಯ ರುಂಡ ಪತ್ತೆಯಾಗಿಲ್ಲ. ಸದ್ಯ ಬಾಲಕಿಯ ರುಂಡ ಪತ್ತೆಗೆ ಪೊಲೀಸರು ಶೋಧ ಆರಂಭಿಸಿದ್ದಾರೆ. ಜತೆಗೆ ಆರೋಪಿ ಮೃತದೇಹವನ್ನು ಮರಣೋತ್ತರ ಪರೀಕ್ಷೆಗಾಗಿ ಆಸ್ಪತ್ರೆಗೆ ರವಾನಿಸಿದ್ದಾರೆ.

ಇದನ್ನೂ ಓದಿ: Karnataka Weather : ಬಿರುಗಾಳಿ ಸಹಿತ ಭಾರಿ ಮಳೆ; ಸಿಡಿಲು ಬಡಿದು ಮಹಿಳೆ ಸೇರಿ ಶ್ವಾನ ಸಾವು‌, ಮತ್ತೊಬ್ಬ ಗಂಭೀರ

ಏನಿದು ಘಟನೆ?

ಮೀನಾ ಇನ್ನೂ ಹತ್ತನೇ ಕ್ಲಾಸ್‌ ಓದುತ್ತಿದ್ದ ಅಪ್ರಾಪ್ತೆ ಆಗಿದ್ದಳು. ಹೀಗಾಗಿ ಗುರುವಾರ ಮಧ್ಯಾಹ್ನ ಪೊಲೀಸರ ಸಮ್ಮುಖದಲ್ಲಿ ಮದುವೆ ನಿಶ್ಚಿತಾರ್ಥ ರದ್ದಾಗಿತ್ತು. ಸಂಜೆ ವೇಳೆ ಆಕೆಯ ಮನೆಗೆ ನುಗ್ಗಿದ ಆರೋಪಿ ಪ್ರಕಾಶ್‌ ಮೀನಾಳನ್ನು ಎಳೆದೊಯ್ದು ಕತ್ತು ಕೊಯ್ದಿದ್ದ. ನಂತರ ದೇಹವನ್ನು ಬಿಸಾಡಿ ರುಂಡ ಕೊಂಡೊಯ್ದಿದ್ದ. ಭೀಕರ ಘಟನೆಯು ಸುತ್ತಲಿನ ಜನರನ್ನು ಬೆಚ್ಚಿ ಬೀಳಿಸಿತ್ತು.

ಆಕೆ ಎಸ್​ಎಸ್​ಎಲ್​ಸಿ ಪರೀಕ್ಷೆ ಬರೆದು ಗುರುವಾರವಷ್ಟೇ ಫಲಿತಾಂಶ ಪ್ರಕಟಗೊಂಡಿತ್ತು. ಇದೇ ವೇಳೆ ನಿಶ್ಚಿತಾರ್ಥ ನಿಗದಿಯಾಗಿತ್ತು. ಅಪ್ರಾಪ್ತ ವಯಸ್ಸಿನವಳಾಗಿದ್ದ ಕಾರಣ ಮೀನಾ ಮದುವೆ ನಿಶ್ಚಿತಾರ್ಥವನ್ನು ರದ್ದು ಮಾಡಲಾಗಿತ್ತು. ಪೊಲೀಸರೇ ಮುಂದೆ ನಿಂತು ಮದುವೆಯನ್ನು ಕೊನೆಗೊಳಿಸಿದ್ದರು. ಆದರೆ ಸಂಜೆ ವೇಳೆಗೆ ಆಕೆಯನ್ನು ಎಳೆದೊಯ್ದು ಪ್ರಕಾಶ್‌ ಕೊಲೆ ಮಾಡಿದ್ದ.

ಬಾಲಕಿಯನ್ನು ಆರೋಪಿ ಪ್ರಕಾಶ್‌ ಪ್ರೀತಿಸುತ್ತಿದ್ದ ಎನ್ನಲಾಗಿದೆ. ಆದರೆ, ಅವರ ಮದುವೆಗೆ ಒಪ್ಪಿಗೆ ಸಿಕ್ಕಿರಲಿಲ್ಲ. ಬಾಲಕಿಗೆ ಮದುವೆಯ ಕಾನೂನುಬದ್ಧ ವಯಸ್ಸಾಗದ ಕಾರಣ ಪೊಲೀಸರು ಅದಕ್ಕೆ ತಡೆಯೊಡ್ಡಿದ್ದರು ಎನ್ನಲಾಗಿದೆ. ಇದರಿಂದ ಆರೋಪಿ ಕೆರಳಿದ್ದ. ಸಂಜೆ ವೇಳೆ ಬಾಲಕಿಯ ಮನೆಗೆ ನುಗ್ಗಿದ ಆತ ಅಲ್ಲಿಂದ ಎಳೆದೊಯ್ದಿದ್ದ. ಬಳಿಕ ಕತ್ತು ಕತ್ತರಿಸಿ ಕೊಲೆ ಮಾಡಿ ರುಂಡವನ್ನು ತೆಗೆದುಕೊಂಡು ಹೋಗಿದ್ದ.

ಇದನ್ನೂ ಓದಿ: Manisha Koirala: ಕ್ಯಾನ್ಸರ್‌ ವಿರುದ್ಧ ಹೋರಾಡಿದ್ದು ಹೇಗೆ? ಅನುಭವ ಹಂಚಿಕೊಂಡ ಮನೀಶಾ ಕೊಯಿರಾಲ

ಎಸ್​ಎಸ್​ಎಲ್​ಸಿ ಪಾಸಾಗಿದ್ದ ಬಾಲಕಿ

ಕರ್ನಾಟಕ ಪ್ರೌಢ ಶಿಕ್ಷಣ ಮಂಡಳಿ ಗುರುವಾರವಷ್ಟೇ ಫಲಿತಾಂಶ ಪ್ರಕಟಿಸಿತ್ತು. ಅಂತೆಯೇ ಸುರ್ಲಬ್ಬಿ ಸರ್ಕಾರಿ ಹೈಸ್ಕೂಲ್​ನ ಏಕೈಕ 10ನೇ ತರಗತಿ ವಿದ್ಯಾರ್ಥಿನಿಯಾಗಿದ್ದ ಮೀನಾ ಪರೀಕ್ಷೆಯಲ್ಲಿ ಪಾಸಾಗಿದ್ದರು. ಆಕೆ ತೇರ್ಗಡೆಗೊಂಡಿರುವ ಸಂಗತಿ ಶಾಲಾ ಅಧ್ಯಾಪಕರಿಗೆ ಸಂತಸ ತಂದಿದ್ದು. ಅಲ್ಲದೆ ಶಾಲೆಯಲ್ಲಿ ಶೇಕಡಾ 100 ಫಲಿತಾಂಶ ಬಂದಿತ್ತು. ಆದರೆ ಸಂಜೆಯ ವೇಳೆಗೆ ಬಾಲಕಿ ಭಯಾನಕವಾಗಿ ಕೊಲೆಯಾಗಿದ್ದಳು.

Continue Reading

ಕರ್ನಾಟಕ

Prajwal Revanna Case: ರೇವಣ್ಣ ಬಸವನಗುಡಿ ನಿವಾಸದಲ್ಲಿ 2ನೇ ಬಾರಿ ಸ್ಥಳ ಮಹಜರು

Prajwal Revanna Case: ರೇವಣ್ಣ ಅವರ ಬಸವನಗುಡಿಯ ಶಿವಸ್ಮಿತ ನಿವಾಸಕ್ಕೆ ಎಸ್ಐಟಿ‌ ಅಧಿಕಾರಿಗಳು ತೆರಳಿ ಸ್ಥಳ ಮಹಜರು ನಡೆಸಿದ್ದಾರೆ.

VISTARANEWS.COM


on

Prajwal Revanna Case
Koo

ಬೆಂಗಳೂರು: ಹಾಸನ ಅಶ್ಲೀಲ ವಿಡಿಯೊ ಪ್ರಕರಣ ಸಂಬಂಧಪಟ್ಟಂತೆ ಎಚ್.ಡಿ. ರೇವಣ್ಣ ನಿವಾಸದಲ್ಲಿ ನಡೆದಿದೆ ಎನ್ನಲಾದ ಅತ್ಯಾಚಾರ ಪ್ರಕರಣದ ತನಿಖೆ ಭಾಗವಾಗಿ ರೇವಣ್ಣ ಅವರ ಬಸವನಗುಡಿಯ ನಿವಾಸದಲ್ಲಿ ಎಸ್‌ಐಟಿ 2ನೇ ಬಾರಿ ಸ್ಥಳ ಮಹಜರು ನಡೆಸಿದೆ. ಕಳೆದ ನಾಲ್ಕು ದಿನಗಳ ಹಿಂದಷ್ಟೇ ಅಧಿಕಾರಿಗಳು ಸ್ಥಳ ಮಹಜರು ನಡೆಸಿದ್ದರು, ಇದೀಗ 2ನೇ ಬಾರಿ ಸಂತ್ರಸ್ತೆ ಸಮ್ಮುಖದಲ್ಲಿ ಎಸ್‌ಐಟಿ ತಂಡ ಮಹಜರು ಕೈಗೊಂಡಿದೆ.

ರೇವಣ್ಣ ಅವರ ಬಸವನಗುಡಿಯ ಶಿವಸ್ಮಿತ ನಿವಾಸಕ್ಕೆ ಎರಡು ಜೀಪ್‌ಗಳಲ್ಲಿ ಎಸ್ಐಟಿ‌ ಅಧಿಕಾರಿಗಳು ತೆರಳಿ ಪರಿಶೀಲನೆ ನಡೆಸಿದ್ದಾರೆ. ಸಂತ್ರಸ್ತೆ ಸಮ್ಮುಖದಲ್ಲಿ ವಿಡಿಯೊ ರೆಕಾರ್ಡ್ ಸಹಿತ ಅಧಿಕಾರಿಗಳು ಮಹಜರು ನಡೆಸಿದ್ದಾರೆ.
ಮನೆಯ ಹಾಲ್, ಪಾರ್ಕಿಂಗ್, ಅಡುಗೆಮನೆ, ಬಾಲ್ಕನಿ ಸೇರಿ ಹಲವು ಕಡೆ ಪರಿಶೀಲನೆ ನಡೆಸಿ, ಸಂತ್ರಸ್ತೆಯಿಂದ ಮಾಹಿತಿ ಪಡೆದಿದ್ದಾರೆ.

ಇದನ್ನೂ ಓದಿ | Prajwal Revanna Case: ಸೋಮವಾರ ರೇವಣ್ಣ ಜಾಮೀನು ಅರ್ಜಿ ವಿಚಾರಣೆ: SIT ವಾದ ಏನು? ವಕೀಲ ನಾಗೇಶ್‌ ಕೌಂಟರ್‌ ಏನು?

ಸಿಐಡಿ ಸೈಬರ್‌ಸೆಲ್‌ನಲ್ಲಿ ದಾಖಲಾಗಿದ್ದ ಅತ್ಯಾಚಾರ ಪ್ರಕರಣದ ಸ್ಥಳವನ್ನು ಎಸ್‌ಐಟಿ ಅಧಿಕಾರಿಗಳು ಮಹಜರು ಮಾಡಿದ್ದಾರೆ. ಈಗಾಗಲೇ ನ್ಯಾಯಾಧೀಶರ ಎದುರು ಕಳೆದ ಶುಕ್ರವಾರ (ಮೇ 3) ಸಿಎಆರ್‌ಪಿಸಿ 164 ಅಡಿಯಲ್ಲಿ ಸಂತ್ರಸ್ತ ಮಹಿಳೆ ತಮ್ಮ ಹೇಳಿಕೆಯನ್ನು ದಾಖಲಿಸಿದ್ದರು. ವಿಚಾರಣೆ ವೇಳೆ ತನ್ನನ್ನು ಹಾಸನದ ಎಂಪಿ ಕ್ವಾರ್ಟರ್ಸ್‌ ಮಾತ್ರವಲ್ಲದೆ ಬೆಂಗಳೂರಿನ ನಿವಾಸದಲ್ಲಿ ಸಹ ಅತ್ಯಾಚಾರ ಎಸಗಿದ್ದಾರೆ ಎಂದು ಹೇಳಿದ್ದರು. ಹೀಗಾಗಿ ಅತ್ಯಾಚಾರ ಪ್ರಕರಣದ ಬಗ್ಗೆ ಬೆಂಗಳೂರಿನಲ್ಲಿರುವ ಎಚ್.ಡಿ. ರೇವಣ್ಣ ಅವರ ಬಸವನಗುಡಿ ನಿವಾಸದಲ್ಲಿ 2ನೇ ಬಾರಿ ಮಹಜರು ಮಾಡಲಾಗಿದೆ.

ಭವಾನಿ ರೇವಣ್ಣಗೆ SIT 2ನೇ ನೋಟಿಸ್‌; ರೇವಣ್ಣ ಫ್ಯಾಮಿಲಿಗೆ ಭಾರಿ ಸಂಕಷ್ಟ!

Prajwal Revanna Case SIT issues 2nd notice to Bhavani Revanna Big trouble for Revanna family

ಬೆಂಗಳೂರು: ಪ್ರಜ್ವಲ್‌ ರೇವಣ್ಣ (Prajwal Revanna Case) ಅವರದ್ದು ಎನ್ನಲಾದ ಅಶ್ಲೀಲ ವಿಡಿಯೊ ಪ್ರಕರಣಕ್ಕೆ ಸಂಬಂಧಪಟ್ಟಂತೆ ಹಾಗೂ ಮೈಸೂರಿನ ಕೆ.ಆರ್.‌ ನಗರದ ಸಂತ್ರಸ್ತೆಯನ್ನು ಅಪಹರಣ ಮಾಡಿದ ಕೇಸ್‌ ದಿನೇ ದಿನೆ ಜಟಿಲವಾಗುತ್ತಿದೆ. ಇನ್ನು ಈ ಪ್ರಕರಣಗಳ ಸಂಬಂಧ ಎಚ್‌.ಡಿ. ರೇವಣ್ಣ (HD Revanna) ಅವರ ಪತ್ನಿ ಭವಾನಿ ರೇವಣ್ಣ (Bhavani Revanna) ಅವರಿಗೆ ವಿಚಾರಣೆಗೆ ಹಾಜರಾಗುವಂತೆ ಎಸ್‌ಐಟಿ ಎರಡನೇ ನೋಟಿಸ್ ನೀಡಿದೆ.

ಮೊದಲ ನೋಟಿಸ್ ಉತ್ತರಿಸದ ಹಿನ್ನೆಲೆಯಲ್ಲಿ ಎರಡನೇ ನೋಟಿಸ್ ಜಾರಿ ಮಾಡಲಾಗಿದೆ. ರೇವಣ್ಣ ಮೇಲೆ ಕೇಳಿ ಬಂದಿರುವ ಅಪಹರಣ ಪ್ರಕರಣದಲ್ಲಿ ಕೇಸ್‌ನಲ್ಲಿ ಕುಮ್ಮಕ್ಕು ಕೊಟ್ಟ ಆರೋಪವನ್ನು ಭವಾನಿ ರೇವಣ್ಣ ಹೊತ್ತಿದ್ದಾರೆ. ಈ ಸಂಬಂಧ ಹಲವಾರು ಪ್ರಶ್ನೆಗಳನ್ನು ಕೇಳಲು ಎಸ್‌ಐಟಿ ಸಿದ್ಧವಾಗಿದೆ. ಆದರೆ, ಭವಾನಿ ವಿಚಾರಣೆಗೆ ಹಾಜರಾಗದೆ ತಪ್ಪಿಸಿಕೊಳ್ಳುತ್ತಿದ್ದಾರೆ. ಈ ಬಾರಿಯೂ ಭವಾನಿ ವಿಚಾರಣೆಗೆ ಹಾಜರಾಗದಿದ್ದರೆ ಎಸ್‌ಐಟಿ ಮುಂದಿನ ಕ್ರಮಗಳನ್ನು ತೆಗೆದುಕೊಳ್ಳಲು ಸಿದ್ಧತೆ ನಡೆಸಿದೆ. ಈ ಹಿನ್ನೆಲೆಯಲ್ಲಿ ರೇವಣ್ಣ ಕುಟುಂಬಕ್ಕೆ ಮತ್ತಷ್ಟು ಸಂಕಷ್ಟ ಎದುರಾಗಲಿದೆ.

ಈಗಾಗಲೇ ಕಿಡ್ನ್ಯಾಪ್ ಪ್ರಕರಣದಲ್ಲಿ ಎಚ್‌.ಡಿ. ರೇವಣ್ಣ ಜೈಲು ಸೇರಿದ್ದಾರೆ. ಜಾಮೀನು ಸಿಗುವವರೆಗೂ ರೇವಣ್ಣಗೆ ಬಿಡುಗಡೆ ಭಾಗ್ಯ ಇಲ್ಲ. ಆದರೆ, ಎಸ್‌ಐಟಿ ಪರ ವಕೀಲರು ಯಾವುದೇ ಕಾರಣಕ್ಕೂ ಎಚ್.ಡಿ. ರೇವಣ್ಣ ಅವರಿಗೆ ಬೇಲ್‌ ಕೊಡಬಾರದು ಎಂದು ಮನವಿ ಮಾಡಿದ್ದಾರೆ. ಇವರು ಪ್ರಭಾವಿ ರಾಜಕಾರಣಿಯಾಗಿದ್ದು, ಬೇಲ್ ಸಿಕ್ಕರೆ ಸಾಕ್ಷಿ ನಾಶ ಮಾಡುತ್ತಾರೆ ಎಂದು ವಾದ ಮಂಡಿಸಿದ್ದಾರೆ.

ಇನ್ನು ಪ್ರಜ್ವಲ್ ರೇವಣ್ಣ ಅವರ ಬಂಧನಕ್ಕೆ ಮೊದಲು ಎಚ್.ಡಿ. ರೇವಣ್ಣ ಅವರ ಬಿಡುಗಡೆ ಅಸಾಧ್ಯ ಎಂದು ಹೇಳಲಾಗುತ್ತಿದೆ. ಪ್ರಜ್ವಲ್ ಎಸ್ಐಟಿಗೆ ಸಿಗುವವರೆಗೂ ರೇವಣ್ಣ ಅವರಿಗೆ ಜಾಮೀನು ಅನುಮಾನವಾಗಿದೆ. ಇನ್ನು ಪ್ರಜ್ವಲ್ ಯಾವುದೇ ಕ್ಷಣದಲ್ಲಿ ದೇಶಕ್ಕೆ ಬಂದರೂ ಎಸ್ಐಟಿ ಬಂಧಿಸುವುದು ಪಕ್ಕಾ ಆಗಿದೆ.

Continue Reading

ಮಳೆ

Karnataka Weather : ಬಿರುಗಾಳಿ ಸಹಿತ ಭಾರಿ ಮಳೆ; ಸಿಡಿಲು ಬಡಿದು ಮಹಿಳೆ ಸೇರಿ ಶ್ವಾನ ಸಾವು‌, ಮತ್ತೊಬ್ಬ ಗಂಭೀರ

Karnataka Weather Forecast : ವಾರಾಂತ್ಯದಲ್ಲಿ ಬಿರುಗಾಳಿಯೊಂದಿಗೆ ಗುಡುಗು ಸಹಿತ ಭಾರಿ ಮಳೆಯಾಗುವ (Rain News) ಮುನ್ಸೂಚನೆಯನ್ನು ಹವಾಮಾನ ಇಲಾಖೆ (Karnataka Weather Forecast) ನೀಡಿದೆ. ಬೆಂಗಳೂರು ಸೇರಿ ಮುಕ್ಕಾಲು ಕರ್ನಾಟಕದಲ್ಲಿ ಮಳೆ ಬೀಳಲಿದೆ.

VISTARANEWS.COM


on

By

karnataka Weather Forecast
Koo

ಬೆಂಗಳೂರು/ಬೆಳಗಾವಿ: ಕಳೆದ ಮೂರು ದಿನಗಳಿಂದ ಹಲವೆಡೆ ಮಳೆಯು (Rain News) ಅಬ್ಬರಿಸುತ್ತಿದ್ದು, ಮೇ 15ರವರೆಗೆ ಗುಡುಗು ಸಹಿತ ಭಾರಿ ಮಳೆಯಾಗುವ (Heavy Rain) ಎಚ್ಚರಿಕೆಯನ್ನು ಹವಾಮಾನ ಇಲಾಖೆ (Karnataka Weather Forecast) ನೀಡಿದೆ. ಶುಕ್ರವಾರದಂದು ಹಲವೆಡೆ ಸುರಿದ ಮಳೆಗೆ ಸಾವು-ನೋವು ಸಂಭವಿಸಿದೆ. ಹೊಲದಲ್ಲಿ ಕೆಲಸ ಮಾಡುತ್ತಿದ್ದ ಮಹಿಳೆಗೆ ಹಾಗೂ ಅವರ ಶ್ವಾನಕ್ಕೆ ಸಿಡಿಲು ಬಡಿದು ಮೃತಪಟ್ಟಿದ್ದಾರೆ.

ಸಿಡಿಲು ಬಡಿದು ಮಹಿಳೆ ಸೇರಿ ಶ್ವಾನ ಸಾವು

ಸಿಡಿಲು ಬಡಿದು ಓರ್ವ ಮಹಿಳೆ ಹಾಗೂ ಶ್ವಾನವೊಂದು ಸ್ಥಳದಲ್ಲಿಯೇ ಮೃತಪಟ್ಟಿದೆ. ಕಲಬುರಗಿ ಜಿಲ್ಲೆಯ ಚಿಂಚೋಳಿ ತಾಲೂಕಿನ ಬೋನಸಪುರ ಗ್ರಾಮದಲ್ಲಿ ಘಟನೆ ನಡೆದಿದೆ. ಸ್ವಪ್ನ (48) ಮೃತ ದುರ್ದೈವಿ. ಸ್ವಪ್ನ ಅವರ ಮಗ ಜ್ಞಾನೇಶ್ವರಗೆ (20) ಗಂಭೀರ ಗಾಯವಾಗಿದ್ದು, ಸ್ಥಳೀಯ ಆಸ್ಪತ್ರೆಗೆ ದಾಖಲಿಸಿ ಚಿಕಿತ್ಸೆ ನೀಡಲಾಗುತ್ತಿದೆ. ತಮ್ಮ ಹೊಲದಲ್ಲಿ ಕೆಲಸ ಮಾಡುವ ಸಂದರ್ಭದಲ್ಲಿ ಈ ದುರ್ಘಟನೆ ಸಂಭವಿಸಿದೆ. ಸಾಕು ನಾಯಿಯು ಸಿಡಿಲಿಗೆ ಬಲಿಯಾಗಿದೆ. ಕುಂಚಾವರಂ ಪೊಲೀಸ್ ಠಾಣಾ ವ್ಯಾಪ್ತಿಯಲ್ಲಿ ಘಟನೆ ನಡೆದಿದೆ.

ಚಿಕ್ಕೋಡಿ ತಾಲೂಕಿನ‌ ವಿವಿಧೆಡೆ ತುಂತುರು ಮಳೆಯಾಗಿದೆ. ಬಿಸಿಲಿನ ಬೇಗೆಗೆ ತತ್ತರಿಸಿದ್ದ ಜನತೆಗೆ ಮಳೆಯಿಂದ ವಾತಾವರಣ ತಂಪಾಗಿತ್ತು. ರೈತರ ಮೊಗದಲ್ಲಿ ಮಂದಹಾಸ ಮೂಡಿದೆ. ಬಿಸಿಲು ನಾಡು ಯಾದಗಿರಿಯಲ್ಲಿ ವರುಣನ ಸಿಂಚನವಾಗಿದೆ. ಕಳೆದ ಒಂದು ಗಂಟೆಯಿಂದ ಸುರಿಯುತ್ತಿರುವ ಮಳೆಗೆ ಶಹಾಪುರ ಪಟ್ಟಣ ಮಲೆನಾಡಿನಂತಾಗಿತ್ತು. ಬಿಸಿಲಿನ ತಾಪಮಾನದಿಂದ ಕಂಗೆಟ್ಟಿದ್ದ ಜನರು ಸಂತಸಗೊಂಡರು. ಶಹಾಪುರ ತಾಲೂಕಿನಾದ್ಯಂತ ಗಾಳಿ ಸಹಿತ ಮಳೆ ಸುರಿಯುತ್ತಿದೆ. ಯಾದಗಿರಿ ಜಿಲ್ಲೆಯಾದ್ಯಂತ ಮೋಡಕವಿದ ವಾತಾವರಣವಿದೆ.

ಕೊಪ್ಪಳದಲ್ಲಿ ಭಾರಿ ಬಿರುಗಾಳಿಗೆ ನೆಲಕ್ಕುರುಳಿದ ಬಾಳೆ

ಕೊಪ್ಪಳ ತಾಲೂಕಿನ ಡೊಂಬರಳ್ಳಿ ಗ್ರಾಮದಲ್ಲಿ ಭಾರಿ ಬಿರುಗಾಳಿ ಮಳೆಗೆ ಬಾಳೆ ಬೆಳೆಯು ಹಾಳಾಗಿದೆ. ಡೊಂಬರಹಳ್ಳಿ ಗ್ರಾಮದ ಬಸವರಡ್ಡಿ ಕರಡ್ಡಿ ಎಂಬುವವರಿಗೆ ಸೇರಿದ ಸುಮಾರು ಒಂದೂವರೆ ಎಕರೆಯಲ್ಲಿ ಬೆಳೆದಿದ್ದ ಬಾಳೆಯು ನೆಲಕ್ಕುರುಳಿದೆ. ಬಾಳೆ ಗೊನೆ ಬಿಟ್ಟು ಫಸಲು ನೀಡುವ ವೇಳೆ ಬಾಳೆ ಬೆಳೆ ನಾಶವಾಗಿದ್ದು, ಲಕ್ಷಾಂತರ ರೂಪಾಯಿ ಹಾನಿಯಾಗಿದೆ. ತೋಟಗಾರಿಕೆ ಇಲಾಖೆಯವರು ಸಮಿಕ್ಷೆ ಮಾಡಿ ಪರಿಹಾರ ನೀಡುವಂತೆ ರೈತರು ಆಗ್ರಹಿಸಿದ್ದಾರೆ.

ಇದನ್ನೂ ಓದಿ: Road Accident : ಪ್ರತ್ಯೇಕ ಅಪಘಾತದಲ್ಲಿ ಇಬ್ಬರು ಸಾವು; ಕರೆಂಟ್‌ ವೈರ್‌ ತಾಗಿ ವ್ಯಕ್ತಿ ಮೃತ್ಯು

ಮೇ 15ರವರೆಗೆ ಮಳೆ ಎಚ್ಚರಿಕೆ

ಮಲೆನಾರಿನ ಕೊಡಗು, ಚಿಕ್ಕಮಗಳೂರು, ಹಾಸನ, ಶಿವಮೊಗ್ಗ ಜಿಲ್ಲೆಗಳಲ್ಲಿ ಮಳೆಯು ಅಬ್ಬರಿಸಲಿದೆ. ಕೆಲವು ಸ್ಥಳಗಳಲ್ಲಿ ಭಾರೀ ಗಾಳಿಯೊಂದಿಗೆ (40-50 kmph) ಗುಡುಗು ಸಹಿತ ಮಳೆಯಾಗುವ ಸಾಧ್ಯತೆಯಿದೆ. ಇನ್ನೂ ಕಾರವಳಿಯ ಉತ್ತರ ಕನ್ನಡ, ಉಡುಪಿ ಮತ್ತು ದಕ್ಷಿಣ ಕನ್ನಡ ಜಿಲ್ಲೆಗಳಲ್ಲಿ ಕೆಲವು ಸ್ಥಳಗಳಲ್ಲಿ ಭಾರೀ ಮಳೆಯಾಗುವ ಸಾಧ್ಯತೆಯಿದೆ.

ಒಳನಾಡಿನ ಜಿಲ್ಲೆಗಳಾದ ದಾವಣಗೆರೆ, ಮಂಡ್ಯ, ಮೈಸೂರು, ಚಾಮರಾಜನಗರ, ಹಾವೇರಿ, ಬೆಳಗಾವಿ, ಬಾಗಲಕೋಟೆ, ಗದಗ, ವಿಜಯಪುರ ಜಿಲ್ಲೆಗಳಲ್ಲಿ ಕೆಲವು ಸ್ಥಳಗಳಲ್ಲಿ ಬಿರುಗಾಳಿ (40-50 kmph) ಬೀಸಲಿದ್ದು, ಗುಡುಗು ಸಹಿತ ಸಾಧಾರಣ ಮಳೆಯಾಗುವ ನಿರೀಕ್ಷೆ ಇದೆ. ಬೀದರ್, ಧಾರವಾಡ, ಕಲಬುರಗಿ, ಕೊಪ್ಪಳ, ರಾಯಚೂರು, ಯಾದಗಿರಿ, ಬಳ್ಳಾರಿ, ಬೆಂಗಳೂರು ಗ್ರಾಮಾಂತರ, ಬೆಂಗಳೂರು ನಗರ, ಚಿಕ್ಕಬಳ್ಳಾಪುರ, ಚಿಕ್ಕಮಗಳೂರು, ಕೋಲಾರ, ರಾಮನಗರ, ಚಿತ್ರದುರ್ಗದ ಕೆಲವು ಸ್ಥಳಗಳಲ್ಲಿ ಬಿರುಗಾಳಿ ಜತೆಗೆ (40-50 kmph) ವ್ಯಾಪಕ ಮಳೆಯಾಗಲಿದೆ.

ಬೆಂಗಳೂರಲ್ಲಿ ಸಾಮಾನ್ಯವಾಗಿ ಮೋಡ ಕವಿದ ವಾತಾವರಣವಿರುತ್ತದೆ. ಕೆಲವು ಪ್ರದೇಶಗಳಲ್ಲಿ ಸಂಜೆ ಅಥವಾ ರಾತ್ರಿ ವೇಳೆಗೆ ಹಗುರದಿಂದ ಸಾಧಾರಣ ಮಳೆಯಾಗಲಿದ್ದು, ಗುಡುಗು ಇರಲಿದೆ. ಗರಿಷ್ಠ ಮತ್ತು ಕನಿಷ್ಠ ತಾಪಮಾನವು ಕ್ರಮವಾಗಿ 32°C ಮತ್ತು 21°C ಇರುವ ಸಾಧ್ಯತೆ ಇದೆ.

ಈ ಸಂಗತಿಯ ಕುರಿತು ನಿಮ್ಮ ಅನಿಸಿಕೆ ಏನು? ಕಾಮೆಂಟ್ ಮೂಲಕ ತಿಳಿಸಿ

Continue Reading

ದೇಶ

Sanatan Sanstha: ದಾಭೋಲ್ಕರ್‌ ಹತ್ಯೆ ಪ್ರಕರಣದಲ್ಲಿ ಸನಾತನ ಸಂಸ್ಥೆಯ ನಿರಪರಾಧಿತನ ಸಾಬೀತು: ಚೇತನ್ ರಾಜಹಂಸ

Sanatan Sanstha: ಡಾ. ದಾಭೋಲ್ಕರ್ ಹತ್ಯೆ ಪ್ರಕರಣದಲ್ಲಿ ಸನಾತನದ ಸಾಧಕರು ನಿರ್ದೋಷಿಗಳೆಂದು ಸಾಬೀತಾಗಿದೆ. ಸನಾತನ ಸಂಸ್ಥೆಯನ್ನು ಕೇಸರಿ ಭಯೋತ್ಪಾದಕ ಎಂದು ತೋರಿಸಿ ನಿರ್ಬಂಧಿಸುವ ಷಡ್ಯಂತ್ರ ವಿಫಲವಾಗಿದೆ ಎಂದು ಸನಾತನ ಸಂಸ್ಥೆ ವಕ್ತಾರ ಚೇತನ್ ರಾಜಹಂಸ ತಿಳಿಸಿದ್ದಾರೆ.

VISTARANEWS.COM


on

Sanatan Sanstha
ಪುಣೆಯಲ್ಲಿ ಶುಕ್ರವಾರ ನಡೆದ ಸುದ್ದಿಗೋಷ್ಠಿಯಲ್ಲಿ ಸನಾತನ ಸಂಸ್ಥೆ ವಕ್ತಾರ ಚೇತನ್ ರಾಜಹಂಸ ಮಾತನಾಡಿದರು.
Koo

ಪುಣೆ: ವಿಚಾರವಾದಿ ಡಾ. ದಾಭೋಲ್ಕರ್ ಹತ್ಯೆ ಪ್ರಕರಣದಲ್ಲಿ ನ್ಯಾಯಾಲಯ ನೀಡಿದ ತೀರ್ಪನ್ನು ನಾವು ಗೌರವಿಸುತ್ತೇವೆ. ಈ ತೀರ್ಪಿನ ಪ್ರಕಾರ ಸನಾತನದ ಸಾಧಕರು ನಿರ್ದೋಷಿಗಳೆಂದು ಸಾಬೀತಾಗಿದೆ. ಈ ಮೂಲಕ ಸನಾತನ ಸಂಸ್ಥೆಯನ್ನು ಹಿಂದು ಭಯೋತ್ಪಾದಕ ಎಂದು ಸಾಬೀತುಪಡಿಸುವ ‘ಅರ್ಬನ್ ನಕ್ಸಲೀಯರ’ ಸಂಚು ವಿಫಲವಾಗಿದೆ ಎಂದು ಸನಾತನ ಸಂಸ್ಥೆ (Sanatan Sanstha) ವಕ್ತಾರ ಚೇತನ್ ರಾಜಹಂಸ ತಿಳಿಸಿದ್ದಾರೆ.

ನಗರದಲ್ಲಿ ಸುದ್ದಿಗೋಷ್ಠಿಯಲ್ಲಿ ಮಾತನಾಡಿದ ಅವರು, ಇಂದು ಪುಣೆ ಸಿ.ಬಿ.ಐ. ವಿಶೇಷ ನ್ಯಾಯಾಲಯವು ಸನಾತನ ಸಂಸ್ಥೆಯ ಸಾಧಕ ವಿಕ್ರಮ್ ಭಾವೆ ಮತ್ತು ಹಿಂದು ಜನಜಾಗೃತಿ ಸಮಿತಿಗೆ ಸಂಬಂಧಿಸಿದ ಡಾ. ವೀರೇಂದ್ರ ಸಿಂಹ ತಾವಡೆ ಇವರನ್ನು ನಿರ್ದೋಷಿಗಳೆಂದು ಮುಕ್ತಗೊಳಿಸಿದೆ, ಜತೆಗೆ ಹಿಂದು ವಿಧಿಜ್ಞ ಪರಿಷತ್ತಿನ ನ್ಯಾಯವಾದಿ ಸಂಜೀವ ಪುನಾಳೇಕರ್ ಅವರನ್ನು ಸಹ ನಿರ್ದೋಷಿಯೆಂದು ಖುಲಾಸೆಗೊಳಿಸಿದೆ. ಈ ಅಪರಾಧದಲ್ಲಿ ಸೇರಿಸಿದ್ದ `ಭಯೋತ್ಪಾದಕ ಚಟುವಟಿಕೆಗಳಿಗೆ ಸಂಬಂಧಿಸಿದ ಯುಎಪಿಎ ಕಾಯ್ದೆಯನ್ನು’ ಸಹ ರದ್ದುಗೊಳಿಸಲಾಗಿದೆ. ಈ ಕಾಯ್ದೆಯನ್ನು ಹಾಕಿ ಸನಾತನ ಸಂಸ್ಥೆಯನ್ನು ಕೇಸರಿ ಭಯೋತ್ಪಾದಕ ಎಂದು ತೋರಿಸಿ ನಿರ್ಬಂಧಿಸುವ ಷಡ್ಯಂತ್ರ ರಚಿಸಲಾಗಿತ್ತು, ಈ ಷಡ್ಯಂತ್ರವೂ ಈಗ ವಿಫಲವಾಗಿದೆ ಎಂದು ಹೇಳಿದ್ದಾರೆ.

ಈ ಪ್ರಕರಣದಲ್ಲಿ ಶಿಕ್ಷೆಗೊಳಗಾದ ಹಿಂದುತ್ವವಾದಿಗಳಾದ ಸಚಿನ್ ಅಂದುರೆ ಮತ್ತು ಶರದ ಕಳಸ್ಕರ್ ಅವರು ಸನಾತನ ಸಂಸ್ಥೆ ಜತೆ ನೇರವಾಗಿ ಸಂಬಂಧ ಹೊಂದಿಲ್ಲದಿದ್ದರೂ ಅಥವಾ ಸನಾತನ ಸಂಸ್ಥೆಯ ಪದಾಧಿಕಾರಿಗಳಲ್ಲದಿದ್ದರೂ, ಅವರನ್ನೂ ಈ ಪ್ರಕರಣದಲ್ಲಿ ಸಿಲುಕಿಸಿರುವ ಸಾಧ್ಯತೆಯದೆ ಎಂದು ನಮಗೆ ಅನಿಸುತ್ತಿದೆ. ಹಾಗಾಗಿ ಈ ಪ್ರಕರಣದ ವಕೀಲರು ಹೇಗೆ ಇಂದು ಇತರರನ್ನು ನಿರಪರಾಧಿಯೆಂದು ಮುಕ್ತಗೊಳಿಸಿದರೋ ಅದೇ ರೀತಿ ಈ ಪ್ರಕರಣವನ್ನು ಉಚ್ಚ ನ್ಯಾಯಾಲಯಕ್ಕೆ ಕೊಂಡೊಯ್ದು ಅವರನ್ನು ನಿರಪರಾಧಿಯೆಂದು ಮುಕ್ತಗೊಳಿಸಲು ಹೋರಾಟ ನಡೆಸುವುದಾಗಿ ಘೋಷಿಸಿದರು.

ಮುಂಬೈ ಉಚ್ಚ ನ್ಯಾಯಾಲಯದಲ್ಲಿ ಸಚಿನ್ ಅಂದುರೆ ಮತ್ತು ಶರದ ಕಳಸ್ಕರ್ ಅವರನ್ನು ನಿರಪರಾಧಿಯೆಂದು ಮುಕ್ತಗೊಳಿಸಲಾಗುವುದು ಎಂಬ ವಿಶ್ವಾಸ ನಮಗಿದೆ. ಈ ಪ್ರಕರಣದ ದೋಷಾರೋಪ ಪತ್ರದಲ್ಲಿ ತನಿಖಾ ಸಂಸ್ಥೆಗಳು ವಿಭಿನ್ನ ಮತ್ತು ನಿರಂತರವಾಗಿ ಬದಲಾಗುತ್ತಿರುವ ಪಾತ್ರಗಳನ್ನು ಮಂಡಿಸಿದೆ. ಅಷ್ಟೇ ಅಲ್ಲ ಆರೋಪಿಗಳ ಪತ್ತೆಗೆ ‘ಪ್ಲಾಂಚೆಟ್’ ಮಾಧ್ಯಮದಿಂದ ಸನಾತನ ಸಂಸ್ಥೆಯು ದೋಷಿಯೆಂದು ಹೇಳಿಸಿಕೊಳ್ಳಲಾಗಿತ್ತು. ಅನಂತರ ಸನಾತನ ಸಂಸ್ಥೆಯ ವಿನಯ್ ಪವಾರ್ ಮತ್ತು ಸಾರಂಗ್ ಅಕೋಲ್ಕರ್ ಅವರನ್ನು ಮೊದಲಿಗೆ ಹಂತಕರು ಎಂದು ಗುರುತಿಸಲಾಯಿತು. ಅದಕ್ಕೂ ಮೊದಲು ಈ ಹಿಂದೆ ಪಿಸ್ತೂಲ್ ವಶಪಡಿಸಿಕೊಂಡ ಮನೀಷ ನಾಗೋರಿ ಮತ್ತು ವಿಕಾಸ ಖಂಡೇಲ್ವಾಲ್ ಅವರಿಗೂ ಕ್ಲೀನ್ ಚಿಟ್ ನೀಡಲಾಗಿತ್ತು. ಅನಂತರ ಸಚಿನ್ ಅಂದುರೆ ಮತ್ತು ಶರದ ಕಳಸ್ಕರ್ ಕೊಲೆಯಲ್ಲಿ ಭಾಗಿಯಾಗಿದ್ದರು ಎಂದು ಮಂಡಿಸಿತು ಎಂದು ಮಾಹಿತಿ ನೀಡಿದ್ದಾರೆ.

ಪುಣೆಯಲ್ಲಿ ನಡೆದ ಸುದ್ದಿಗೋಷ್ಠಿಯಲ್ಲಿ ಎಡದಿಂದ ಹಿಂದು ಜನಜಾಗೃತಿ ಸಮಿತಿಯ ಸುನೀಲ್ ಘನವಟ, ಸನಾತನ ಸಂಸ್ಥೆಯ ವಕ್ತಾರರಾದ ಅಭಯ ವರ್ತಕ ಮತ್ತು ಸನಾತನ ಸಂಸ್ಥೆಯ ಚೈತನ್ಯ ತಾಗಡೆ ಇದ್ದರು.

ಈ ಪ್ರಕರಣದಲ್ಲಿ ಸಾಕ್ಷಿಗಳ ಪಾತ್ರವೇ ಸಂದೇಹಾಸ್ಪದವಾಗಿತ್ತು. ಅವರು ಈ ಹಿಂದೆ ವಿನಯ ಪವಾರ್ ಮತ್ತು ಅಕೋಲ್ಕರ್ ಇವರನ್ನೂ ಹಂತಕರು ಎಂದು ಗುರುತಿಸಿದ್ದರು. ಅಂಧಶ್ರದ್ಧಾ ನಿರ್ಮೂಲನಾ ಸಮಿತಿಯ (ಅಂನಿಸ) ಕಾರ್ಯಕರ್ತರು ತಮ್ಮನ್ನು ಭೇಟಿಯಾಗಲು ಬಂದಿದ್ದು, ಅವರ ಜತೆ ಊಟ ಮಾಡುತ್ತಿದ್ದೆ ಎಂದೂ ಅವರು ನ್ಯಾಯಾಲಯಕ್ಕೆ ತಿಳಿಸಿದ್ದರು. ಸಾಕ್ಷಿಗಳ ಈ ಕೃತಿಯಿಂದ ಅವರ ಮೇಲೆ ಅಂನಿ.ಸ ಒತ್ತಡವಿತ್ತೇ ಎಂಬ ಪ್ರಶ್ನೆ ಮೂಡಿದೆ ಎಂದು ತಿಳಿಸಿದ್ದಾರೆ.

ಇದನ್ನೂ ಓದಿ | Reservation Row: ಎಸ್‌ಸಿ / ಎಸ್‌ಟಿ ಮೀಸಲಾತಿಗೆ ನೆಹರೂ ವಿರೋಧ ವ್ಯಕ್ತಪಡಿಸಿದ್ದರು: ಸಾಕ್ಷಿ ಸಮೇತ ಬಹಿರಂಗಪಡಿಸಿದ ಬಿಜೆಪಿ

ಈ ಪ್ರಕರಣದಲ್ಲಿ ಕೇವಲ ಅಂ.ನಿ.ಸ ದವರಿಗೆ ಸಾಕ್ಷಿದಾರರೊಂದಿಗೆ ಸಂಬಂಧವಿತ್ತೆಂಬುದಷ್ಟೇ ಅಲ್ಲದೇ ಡಾ. ದಾಭೋಲ್ಕರ್ ಕುಟುಂಬ ತನಿಖಾ ಸಂಸ್ಥೆಗಳ ಮೇಲೆ ಒತ್ತಡ ಹೇರಿತ್ತು ಎಂಬುದು ಸಿದ್ಧವಾಯಿತು. ಅದರ ಪರಿಣಾಮವಾಗಿ ಸನಾತನ ಸಂಸ್ಥೆಯ ಮೇಲೆ ಪೂರ್ವಗ್ರಹಪೀಡಿತವಾಗಿ ತನಿಖೆ ನಡೆಯಿತು. ಕಳೆದ 11 ವರ್ಷಗಳಲ್ಲಿ ಸನಾತನದ 1600 ಸಾಧಕರ ವಿಚಾರಣೆ ನಡೆಸಲಾಗಿದೆ. ಸನಾತನದ ಆಶ್ರಮಗಳ ಮೇಲೆ ದಾಳಿ ಮಾಡಲಾಯಿತು. ಈ ಪ್ರಕರಣದ ಮಾಸ್ಟರ್ ಮೈಂಡ್ ಪತ್ತೆ ಹಚ್ಚುವ ಹೆಸರಿನಲ್ಲಿ ಖಟ್ಲೆಯನ್ನು ತಡೆಹಿಡಿಯಲಾಯಿತು. ಸಿಬಿಐ ತನ್ನ ದೋಷಾರೋಪಪತ್ರದಲ್ಲಿ `ಸನಾತನ ಸಂಸ್ಥೆಯ ಎಲ್ಲ ಪದಾಧಿಕಾರಿಗಳನ್ನು ವಿಚಾರಣೆಗೊಳಪಡಿಸಿದ್ದು, ಯಾರೂ ತಪ್ಪಿತಸ್ಥರಲ್ಲ’ ಎಂದು ನಮೂದಿಸಿದೆ. ಇದು 11 ವರ್ಷಗಳ ನಂತರ ಸನಾತನ ಸಂಸ್ಥೆಗೆ ತಡವಾಗಿ ದೊರಕಿದ ನ್ಯಾಯವಾಗಿದೆ ಎಂದು ಹೇಳಿದ್ದಾರೆ.

Continue Reading
Advertisement
Murder Case
ಕರ್ನಾಟಕ6 mins ago

Murder Case: ಬೆಂಗಳೂರಿನಲ್ಲಿ ಒಂಟಿ ಮಹಿಳೆಯ ಕತ್ತು ಹಿಸುಕಿ ಕೊಲೆ; ಮನೆ ಬಾಡಿಗೆ ಕೇಳುವ ನೆಪದಲ್ಲಿ ಕೃತ್ಯ

Akbar Nagar
ದೇಶ13 mins ago

Akbar Nagar: ಉತ್ತರ ಪ್ರದೇಶದ ಅಕ್ಬರ್‌ ನಗರದ ಅಕ್ರಮ ಮನೆಗಳ ಧ್ವಂಸಕ್ಕೆ ಸುಪ್ರೀಂ ಕೋರ್ಟ್‌ ಅಸ್ತು!

Colin Munro
ಪ್ರಮುಖ ಸುದ್ದಿ29 mins ago

Colin Munro : ನ್ಯೂಜಿಲ್ಯಾಂಡ್​ ಟಿ20 ಸ್ಪೆಷಲಿಸ್ಟ್​ ಅಟಗಾರ ನಿವೃತ್ತಿ; ಈ ಆಟಗಾರನ ಸಾಧನೆಗಳ ವಿವರ ಇಲ್ಲಿದೆ

T20 world cup
ಕ್ರೀಡೆ57 mins ago

T20 World Cup : ವಿಶ್ವ ಕಪ್​ಗೆ ಭಾರತ ತಂಡ ಪ್ರಯಾಣಿಸುವ ದಿನಾಂಕ ಪ್ರಕಟಿಸಿದ ಜಯ್​ ಶಾ

Dietary Guidelines
Latest1 hour ago

Dietary Guidelines: ಕಡಿಮೆ ದೈಹಿಕ ಚಟುವಟಿಕೆ ಇರುವವರಿಗೆ ಯಾವ ರೀತಿಯ ಆಹಾರ ಸೂಕ್ತ?

Lover refused to marriage Young woman committed suicide in kalaburagi
ಕಲಬುರಗಿ2 hours ago

Self Harming: ಪ್ರೀತಿಸಲು ಓಕೆ, ಮದುವೆಗೆ ನೋ ಎಂದ ಪ್ರಿಯಕರ; ಮನನೊಂದು ಯುವತಿ ಆತ್ಮಹತ್ಯೆ

Jay Shah
ಪ್ರಮುಖ ಸುದ್ದಿ2 hours ago

Jay Shah : ”ನಾನವನಲ್ಲ, ನಾನವನಲ್ಲ”; ಶ್ರೇಯಸ್​, ಇಶಾನ್ ವಿವಾದಕ್ಕೆ ಸ್ಪಷ್ಟನೆ ನೀಡಿದ ಜಯ್​ ಶಾ

Naxals K
ದೇಶ2 hours ago

Naxals Encounter: ಛತ್ತೀಸ್‌ಗಢದಲ್ಲಿ ಭದ್ರತಾ ಸಿಬ್ಬಂದಿ ಭರ್ಜರಿ ಬೇಟೆ; 12 ನಕ್ಸಲರ ಹತ್ಯೆ

Veg v/s Non Veg Thali
ಆರೋಗ್ಯ2 hours ago

Veg v/s Non Veg Thali: ಭಾರತದಲ್ಲಿ ನಾನ್‌ವೆಜ್‌ ಊಟಕ್ಕಿಂತ ವೆಜ್ ಊಟ ದುಬಾರಿ! ಏಕೆ ಗೊತ್ತಾ?

Maruti Suzuki
ಆಟೋಮೊಬೈಲ್2 hours ago

Maruti Suzuki: ಶೀಘ್ರ ರಸ್ತೆಗಿಳಿಯಲಿದೆ ಬರೋಬ್ಬರಿ 26 ಕಿ.ಮೀ ಮೈಲೇಜ್ ಕೊಡುವ ಮಾರುತಿ ಸ್ವಿಫ್ಟ್​; ಶುರುವಾಗಿದೆ ಬುಕಿಂಗ್​

Sharmitha Gowda in bikini
ಕಿರುತೆರೆ7 months ago

Geetha Serial Kannada: ನಿದ್ದೆ ಕದ್ದ ಚೋರಿ! ನಟಿ `ಭಾನುಮತಿ’ ಹಾಟ್‌ ಪೋಟೊಗಳಿಗೆ ಫ್ಯಾನ್ಸ್ ಫುಲ್ ಫಿದಾ

Kannada Serials
ಕಿರುತೆರೆ7 months ago

Kannada Serials TRP: 2ನೇ ಸ್ಥಾನದಲ್ಲಿ 2 ಧಾರಾವಾಹಿಗಳು; ಟಿಆರ್‌ಪಿ ರೇಸ್‌ನಲ್ಲಿಲ್ಲ ಭಾಗ್ಯಲಕ್ಷ್ಮೀ!

Bigg Boss- Saregamapa 20 average TRP
ಕಿರುತೆರೆ7 months ago

Kannada Serials TRP: ಏಳನೇ ಸ್ಥಾನಕ್ಕೆ ʻಅಮೃತಧಾರೆʼ ಕುಸಿತ; ಬಿಗ್‌ ಬಾಸ್‌-ಸರಿಗಮಪ ಟಿಆರ್‌ಪಿ ಎಷ್ಟು?

galipata neetu
ಕಿರುತೆರೆ5 months ago

Kanyadana Serial: ಕಿರುತೆರೆಗೆ ಮತ್ತೆ ಎಂಟ್ರಿ ಕೊಟ್ಟ ʻಗಾಳಿಪಟʼ ಖ್ಯಾತಿಯ ʻನೀತುʼ!

Kannada Serials
ಕಿರುತೆರೆ8 months ago

Kannada Serials TRP: ನಾಲ್ಕನೇ ಸ್ಥಾನಕ್ಕೆ ಕುಸಿತ ಕಂಡ ʻಸೀತಾ ರಾಮʼ; ಟಿಆರ್‌ಪಿ ರೇಸ್‌ಗೆ ʻಭಾಗ್ಯಲಕ್ಷ್ಮಿʼ ಬ್ಯಾಕ್‌!

Kannada Serials
ಕಿರುತೆರೆ7 months ago

Kannada Serials TRP: ಟಿಆರ್‌ಪಿಯಲ್ಲಿ ʻಭಾಗ್ಯಲಕ್ಷ್ಮೀʼ ಹವಾ; ʻಪುಟ್ಟಕ್ಕನ ಮಕ್ಕಳುʼ ಧಾರಾವಾಹಿಗೆ ಸಂಕಷ್ಟ!

Bigg Boss' dominates TRP; Sita Rama fell to the sixth position
ಕಿರುತೆರೆ7 months ago

Kannada Serials TRP: ಟಿಆರ್‌ಪಿಯಲ್ಲಿ ʻಬಿಗ್ ಬಾಸ್ʼದೇ ಮೇಲುಗೈ; 6ನೇ ಸ್ಥಾನಕ್ಕೆ ಕುಸಿದ ʻಸೀತಾ ರಾಮʼ

geetha serial Dhanush gowda engagement
ಕಿರುತೆರೆ5 months ago

Dhanush Gowda: ಗೀತಾ ಧಾರಾವಾಹಿ ನಟನ ನಿಶ್ಚಿತಾರ್ಥ; ಭವ್ಯಾಳ ಕಮೆಂಟ್‌ ಬಾಕ್ಸ್‌ ಆಫ್‌!

varun
ಕಿರುತೆರೆ6 months ago

Brindavana Serial: ʼಬೃಂದಾವನʼ ಧಾರಾವಾಹಿಯಲ್ಲಿ ದೊಡ್ಡ ಟ್ವಿಸ್ಟ್‌; ಪ್ರಮುಖ ಪಾತ್ರಧಾರಿಯೇ ಬದಲು

Kannada Serials
ಕಿರುತೆರೆ8 months ago

Kannada Serials TRP: ಟಿಆರ್‌ಪಿಯಲ್ಲಿ ಏರಿಕೆ ಕಂಡ ʻಅಮೃತಧಾರೆʼ; ʻಗಟ್ಟಿಮೇಳʼಕ್ಕೆ ನಾಲ್ಕನೇ ಸ್ಥಾನ!

Physical Abuse The public prosecutor called the client woman to the lodge
ಕ್ರೈಂ7 hours ago

Physical Abuse : ಲೈಂಗಿಕ ದೌರ್ಜನ್ಯ; ಕಕ್ಷಿದಾರ ಮಹಿಳೆಯನ್ನು ಮಂಚಕ್ಕೆ ಕರೆದ ಪಬ್ಲಿಕ್ ಪ್ರಾಸಿಕ್ಯೂಟರ್!

murder case kalaburagi
ಕಲಬುರಗಿ8 hours ago

Murder Case : ಕಾಂಗ್ರೆಸ್‌ಗೆ ವೋಟ್‌ ಹಾಕಿದ್ದಕ್ಕೆ ಅಮಾವಾಸ್ಯೆ ದಿನ ಕರೆದು ಕೊಂದರು

Rain Effect In karnataka
ಮಳೆ9 hours ago

Rain Effect : ಬಿರುಗಾಳಿ ರಭಸಕ್ಕೆ ಮನೆಯ ಗೇಟ್ ಬಿದ್ದು ಬಾಲಕಿ ಸಾವು; ಸಿಡಿಲಿಗೆ ಎತ್ತುಗಳು ಬಲಿ

Dina Bhavishya
ಭವಿಷ್ಯ16 hours ago

Dina Bhavishya: ಶುಭ ಶುಕ್ರವಾರ ಈ ರಾಶಿಯವರಿಗೆ ಖುಲಾಯಿಸಲಿದೆ ಲಕ್‌

Prajwal Revanna case Revanna bail plea to be heard on Monday Advocate Nagesh argument was as follows
ಕ್ರೈಂ23 hours ago

Prajwal Revanna Case: ರೇವಣ್ಣ ಜಾಮೀನು ಅರ್ಜಿ ಸೋಮವಾರಕ್ಕೆ: ಎಸ್‌ಐಟಿಗೆ ಹಿಗ್ಗಾಮುಗ್ಗಾ ತರಾಟೆ; ವಕೀಲ ನಾಗೇಶ್‌ ವಾದ ಹೀಗಿತ್ತು!

Prajwal Revanna Case Hasanambe is going to destroy this government HD Kumaraswamy curse
ರಾಜಕೀಯ1 day ago

Prajwal Revanna Case: ಈ ಸರ್ಕಾರವನ್ನು ಹಾಸನಾಂಬೆ ಧ್ವಂಸ ಮಾಡಲಿದ್ದಾಳೆ: ಎಚ್‌ಡಿಕೆ ಶಾಪ

Prajwal Revanna Case DK Shivakumar alleged mastermind in 25000 pen drive allotment
ಹಾಸನ1 day ago

Prajwal Revanna Case: 25,000 ಪೆನ್ ಡ್ರೈವ್ ಹಂಚಿಕೆಯಲ್ಲಿ ಡಿ.ಕೆ. ಶಿವಕುಮಾರ್ ಮಾಸ್ಟರ್ ಮೈಂಡ್ ಎಂದು ರಾಜ್ಯಪಾಲರಿಗೆ ದೂರು!

SSLC Result 2024 what is the reason for most of the students fail in SSLC
ಕರ್ನಾಟಕ1 day ago

SSLC Result 2024: ಎಸ್‌ಎಸ್‌ಎಲ್‌ಸಿಯಲ್ಲಿ ಹೆಚ್ಚಿನ ಮಕ್ಕಳು ಫೇಲ್‌ ಆಗಲು ಶಿಕ್ಷಣ ಇಲಾಖೆಯ ಈ ನಿರ್ಧಾರವೇ ಕಾರಣ!

Sslc exam Result 2024
ಶಿಕ್ಷಣ1 day ago

SSLC Result 2024 : ಎಸ್‌ಎಸ್‌ಎಲ್‌ಸಿ ಪರೀಕ್ಷೆಯಲ್ಲಿ ಫೇಲಾದರೂ, ಕಡಿಮೆ ಅಂಕ ಬಂದರೂ ಡೋಂಟ್‌ ವರಿ; ಇನ್ನೂ ಇದೆ ಎರಡು ಚಾನ್ಸ್‌!

SSLC Result 2024 secret behind 20 percent grace marks
ಕರ್ನಾಟಕ1 day ago

SSLC Result 2024: ಎಸ್‌ಎಸ್‌ಎಲ್‌ಸಿಯಲ್ಲಿ ಈ ಬಾರಿ ನೂರಕ್ಕೆ 25 ಅಂಕ ಪಡೆದವರೂ ಪಾಸ್! ಶೇ. 20 ಗ್ರೇಸ್ ಮಾರ್ಕ್ಸ್ ಕೊಟ್ಟಿದ್ದರ ಹಿಂದಿದೆ ಇಂಟರೆಸ್ಟಿಂಗ್ ಕತೆ!

ಟ್ರೆಂಡಿಂಗ್‌