Citadel Hunny Bunny: ಕಾರ್ಯಕ್ರಮವೊಂದರಲ್ಲಿ ಒಟ್ಟಿಗೆ ಕಾಣಿಸಿಕೊಂಡ ಮಾಜಿ ದಂಪತಿ ಸಮಂತಾ-ನಾಗಚೈತನ್ಯ! - Vistara News

ಟಾಲಿವುಡ್

Citadel Hunny Bunny: ಕಾರ್ಯಕ್ರಮವೊಂದರಲ್ಲಿ ಒಟ್ಟಿಗೆ ಕಾಣಿಸಿಕೊಂಡ ಮಾಜಿ ದಂಪತಿ ಸಮಂತಾ-ನಾಗಚೈತನ್ಯ!

Citadel Hunny Bunny: ಮುಂಬೈನಲ್ಲಿ ಮಾರ್ಚ್​ 19 ನಡೆದ ಕಾರ್ಯಕ್ರಮದಲ್ಲಿ ಸಮಂತಾ, ನಾಗ ಚೈತನ್ಯ, ವರುಣ್​ ಧವನ್​ ಮುಂತಾದವರು ಭಾಗಿಯಾಗಿದ್ದರು. ಮಾಜಿ ದಂಪತಿ ಬೇರೆ ಬೇರೆ ಸಂದರ್ಭದಲ್ಲಿ ವೇದಿಕೆ ಏರಿದರು.

VISTARANEWS.COM


on

Samantha Ruth Prabhu and Naga Chaitanya
ಮಹತ್ವದ, ಕುತೂಹಲಕರ ಸುದ್ದಿಗಾಗಿ ಫಾಲೊ ಮಾಡಿ
Koo

ಬೆಂಗಳೂರು: ಸಮಂತಾ ರುತ್ ಪ್ರಭು ಹಾಗೂ ನಾಗ ಚೈತನ್ಯ ವಿಚ್ಛೇದನದ ಪಡೆದು ಮೂರು ವರ್ಷಗಳು ಕಳೆದಿವೆ. ಇದೀಗ ನಟಿ ಸಮಂತಾ ರುತ್ ಪ್ರಭು ಇತ್ತೀಚೆಗೆ ತಮ್ಮ ಮಾಜಿ ಪತಿ ನಾಗ ಚೈತನ್ಯ ಅವರೊಂದಿಗೆ ಕಾರ್ಯಕ್ರಮವೊಂದರಲ್ಲಿ ಕಾಣಿಸಿಕೊಂಡರು. ಸಮಂತಾ ನಟಿಸಿರುವ ‘ಸಿಟಾಡೆಲ್​ ಹನಿ ಬನಿ’ (Citadel Hunny Bunny) ಕೂಡ ‘ಅಮೇಜಾನ್​ ಪ್ರೈಂ ವಿಡಿಯೋ’ ಮೂಲಕವೇ ಪ್ರಸಾರಕ್ಕೆ ಸಜ್ಜಾಗುತ್ತಿದೆ. ಈ ಒಟಿಟಿ ಸಂಸ್ಥೆ ನಡೆಸಿದ ಸುದ್ದಿಗೋಷ್ಠಿಯಲ್ಲಿ ಸಮಂತಾ, ನಾಗ ಚೈತನ್ಯ, ವರುಣ್​ ಧವನ್​ ಮುಂತಾದ ಕಲಾವಿದರು ಭಾಗಿಯಾಗಿದ್ದರು.

ಮಾರ್ಚ್ 19 ರಂದು, ರಾಜ್ ಮತ್ತು ಡಿಕೆ ನಿರ್ದೇಶನದ ‘ಸಿಟಾಡೆಲ್- ಹನಿ ಬನ್ನಿ,’ ಅವರ ಆಕ್ಷನ್ ಸರಣಿಯ ಬಿಡುಗಡೆಯ ಮೊದಲು ವರುಣ್ ಧವನ್ ಅವರೊಂದಿಗೆ ಸಮಂತಾ ಸಮಾರಂಭದಲ್ಲಿ ಭಾಗವಹಿಸಿದ್ದರು.(ಮಾರ್ಚ್​ 19) ಮುಂಬೈನಲ್ಲಿ ಕಾರ್ಯಕ್ರಮದಲ್ಲಿ ಸಮಂತಾ ಮತ್ತು ನಾಗ ಚೈತನ್ಯ (Naga Chaitanya) ಅವರು ಪಾಲ್ಗೊಂಡಿದ್ದಾರೆ. ಬೇರೆ ಬೇರೆ ಸಂದರ್ಭದಲ್ಲಿ ವೇದಿಕೆ ಏರಿದರು. ನಾಗ ಚೈತನ್ಯ ನಟಿಸಿದ ‘ಧೂತ’ ವೆಬ್​ ಸಿರೀಸ್​ ಅಮೇಜಾನ್​ ಪ್ರೈಂ ವಿಡಿಯೋದಲ್ಲಿ ಬಿಡುಗಡೆಯಾಗಿತ್ತು. ಸಮಂತಾ ನಟಿಸಿರುವ ‘ಸಿಟಾಡೆಲ್​ ಹನಿ ಬನಿ’ ಕೂಡ ‘ಅಮೇಜಾನ್​ ಪ್ರೈಂ ವಿಡಿಯೊ’ ಮೂಲಕವೇ ಪ್ರಸಾರ ಆಗಲಿದೆ.

ಇದನ್ನೂ ಓದಿ: Samantha | ಸಮಂತಾ ರುತ್ ಪ್ರಭು ನಟನೆಯ ಶಾಕುಂತಲಂ ಬಿಡುಗಡೆ ದಿನಾಂಕ ಫಿಕ್ಸ್‌

ಈವೆಂಟ್‌ನಲ್ಲಿ ಪ್ರಿಯಾಂಕಾ ಚೋಪ್ರಾ, ಸೂರ್ಯ, ಶಾಹಿದ್ ಕಪೂರ್, ಬಾಬಿ ಡಿಯೋಲ್, ತಮನ್ನಾ ಭಾಟಿಯಾ ಮತ್ತು ಶೋಭಿತಾ ಧುಲಿಯಾಲ ಸೇರಿದಂತೆ ಇತರ ನಟ ನಟಿಯರು ಭಾಗವಹಿಸಿದ್ದರು.

ಸಿಟಾಡೆಲ್ (Citadel) ಯೂನಿವರ್ಸ್‌ನ ಭಾರತೀಯ ಅಧ್ಯಾಯದಲ್ಲಿ ವರುಣ್ ಧವನ್ ಹಾಗೂ ಸಮಂತಾ (Samantha Ruth Prabhu) ನಾಯಕ, ನಾಯಕಿಯಾಗಿ ಕಾಣಿಸಿಕೊಳ್ಳುತ್ತಿದ್ದಾರೆ. ಈ ಸರಣಿಯಲ್ಲಿ ಕೇ ಕೇ ಮೆನನ್, ಸಿಮ್ರಾನ್, ಸೋಹಮ್ ಮಜುಂದಾರ್, ಶಿವಂಕಿತ್ ಸಿಂಗ್ ಪರಿಹಾರ್, ಕಶ್ವಿ ಮಜ್ಮುಂದರ್, ಸಾಕಿಬ್ ಸಲೀಮ್ ಮತ್ತು ಸಿಕಂದರ್ ಖೇರ್ ಕೂಡ ನಟಿಸಿದ್ದಾರೆ. ಅಮೇರಿಕನ್ ಲೆಗ್ ಆಫ್ ಸಿಟಾಡೆಲ್ ಅನ್ನು ಪ್ರಿಯಾಂಕಾ ಚೋಪ್ರಾ ಜೋನಾಸ್ ಮತ್ತು ರಿಚರ್ಡ್ ಮ್ಯಾಡೆನ್ ನೇತೃತ್ವ ವಹಿಸಿದ್ದರು.

ಕ್ಷಣ ಕ್ಷಣದ ಮಾಹಿತಿಗಾಗಿ Vistara News FaceBook ಪೇಜ್ ಫಾಲೋ ಮಾಡಿ
ಮಹತ್ವದ ಮಾಹಿತಿಗಾಗಿ ವಿಸ್ತಾರ ನ್ಯೂಸ್ ಆ್ಯಪ್ ಉಚಿತವಾಗಿ ಡೌನ್ ಲೋಡ್ ಮಾಡಿಕೊಳ್ಳಿ: Andriod App | IOS App
Continue Reading
Click to comment

Leave a Reply

Your email address will not be published. Required fields are marked *

ಟಾಲಿವುಡ್

Ram Pothineni: ರಾಮ್ ಪೋತಿನೇನಿ ಅಭಿನಯದ ʻಡಬಲ್ ಇಸ್ಮಾರ್ಟ್ʼ ಬಿಡುಗಡೆಗೆ‌ ಮುಹೂರ್ತ ಫಿಕ್ಸ್!

Ram Pothineni: ಈ‌ ಮೊದಲ ಬಂದ ಈ ಚಿತ್ರದ ಮೊದಲ ಸರಣಿ ಸಿನಿಮಾ 2019 ರಲ್ಲಿ ರಿಲೀಸ್ ಆಗಿತ್ತು. ಇದರಲ್ಲಿ ಕನ್ನಡತಿ ನಭಾ ನಟೇಶ್ ಅಭಿನಯಿಸಿದ್ದರು. ಆಗ ಈ ಸಿನಿಮಾ ಕರ್ಮಷಿಯಲಿ ಸಕ್ಸಸ್ ಆಗಿತ್ತು. ಆದರೆ ಈ ಸಿನಿಮಾ ಬಂದು 5 ವರ್ಷದ ಬಳಿಕ ಪಾರ್ಟ್-2 ಡಬಲ್ ಇಸ್ಮಾರ್ಟ್ ಸಿನಿಮಾ ಬರ್ತಿದೆ.

VISTARANEWS.COM


on

Double iSmart to release on August 15
Koo

ಬೆಂಗಳೂರು: ನಿರ್ದೇಶಕ ಪುರಿ ಜಗನ್ನಾಥ್ ಹಾಗೂ ನಟ ರಾಮ್ ಪೋತಿನೇನಿ (Ram Pothineni) ಕಾಂಬಿನೇಷನ್ ಮೇಲೆ ಸಿನಿಪ್ರಿಯರಿಗೆ ಭಾರಿ ನಿರೀಕ್ಷೆ ಇದೆ. ಪ್ರೇಕ್ಷಕರ ನಿರೀಕ್ಷೆಗೆ ತಕ್ಕಂತೆಯೇ ‘ಡಬಲ್ ಇಸ್ಮಾರ್ಟ್’ ಚಿತ್ರದ ಟೀಸರ್​ ಮೂಡಿಬಂದಿದೆ. ಇದೀಗ ಈ ಚಿತ್ರದ ಬಿಡುಗಡೆ ದಿನಾಂಕ‌ ನಿಗದಿಯಾಗಿದೆ. ಆಗಸ್ಟ್ 15ಕ್ಕೆ ಡಬಲ್ ಇಸ್ಮಾರ್ಟ್ ಚಿತ್ರ ತೆರೆಗೆ ಬರಲಿದೆ.

ಸೌತ್​ ಸಿನಿಮಾಗಳಲ್ಲಿ ಖಳನಾಗಿ ಅಬ್ಬರಿಸುತ್ತಿರುವ ಸಂಜಯ್ ದತ್ ಅವರು ‘ಡಬಲ್​ ಇಸ್ಮಾರ್ಟ್​’ ಚಿತ್ರದಲ್ಲೂ ವಿಲನ್​ ಆಗಿ ಅಭಿನಯಿಸಿದ್ದಾರೆ. ನಾಯಕಿಯಾಗಿ ಕಾವ್ಯಾ ಥಾಪರ್ ನಟಿಸಿದ್ದಾರೆ.

ತೆಲುಗು ಮಾತ್ರವಲ್ಲದೇ ಕನ್ನಡ, ತಮಿಳು, ಮಲಯಾಳಂ ಹಾಗೂ ಹಿಂದಿ ಭಾಷೆಗಳಲ್ಲಿ ‘ಡಬಲ್​ ಇಸ್ಮಾರ್ಟ್​’ ಸಿನಿಮಾ ಬಿಡುಗಡೆ ಆಗಲಿದೆ. ಮಣಿ ಶರ್ಮಾ ಅವರು ಈ ಸಿನಿಮಾಗೆ ಸಂಗೀತ ನಿರ್ದೇಶನ ಮಾಡಿದ್ದಾರೆ. ‘ಪುರಿ ಕನೆಕ್ಟ್ಸ್​’ ಬ್ಯಾನರ್ ಮೂಲಕ ಪುರಿ ಜಗನ್ನಾಥ್, ಚಾರ್ಮಿ ಕೌರ್ ಅವರು ಈ ಸಿನಿಮಾವನ್ನು ನಿರ್ಮಿಸಿದ್ದಾರೆ.

ಈ‌ ಮೊದಲ ಬಂದ ಈ ಚಿತ್ರದ ಮೊದಲ ಸರಣಿ ಸಿನಿಮಾ 2019 ರಲ್ಲಿ ರಿಲೀಸ್ ಆಗಿತ್ತು. ಇದರಲ್ಲಿ ಕನ್ನಡತಿ ನಭಾ ನಟೇಶ್ ಅಭಿನಯಿಸಿದ್ದರು. ಆಗ ಈ ಸಿನಿಮಾ ಕರ್ಮಷಿಯಲಿ ಸಕ್ಸಸ್ ಆಗಿತ್ತು. ಆದರೆ ಈ ಸಿನಿಮಾ ಬಂದು 5 ವರ್ಷದ ಬಳಿಕ ಪಾರ್ಟ್-2 ಡಬಲ್ ಇಸ್ಮಾರ್ಟ್ ಸಿನಿಮಾ ಬರ್ತಿದೆ. ಟಾಲಿವುಡ್‌ನಲ್ಲಿ ಈಗಲೇ ಒಂದು ನಿರೀಕ್ಷೆಯನ್ನು ಕೂಡ ಹುಟ್ಟುಹಾಕಿದೆ ಅಂತ ಹೇಳಬಹುದು.

ಇದನ್ನೂ ಓದಿ: Ram Pothineni: ಡೈನಾಮಿಕ್ ಸ್ಟಾರ್ ರಾಮ್‌ – ಸಂಜಯ್ ದತ್ ಭರ್ಜರಿ ಜುಗಲ್ಬಂದಿ: `ಡಬಲ್ ಇಸ್ಮಾರ್ಟ್‘ ಟೀಸರ್‌ ಔಟ್‌!

ಕಾವ್ಯಾ ಥಾಪರ್ ನಾಯಕಿಯಾಗಿ ನಟಿಸಿದ್ದು, ಸಂಜಯ್ ದತ್ ಖಳನಾಯಕನಾಗಿ ತೊಡೆ ತಟ್ಟಿದ್ದಾರೆ. ತೆಲುಗು, ತಮಿಳು, ಕನ್ನಡ, ಮಲಯಾಳಂ ಮತ್ತು ಹಿಂದಿ ಭಾಷೆಗಳಲ್ಲಿ ಚಿತ್ರ ಮೂಡಿ ಬರುತ್ತಿದೆ. ಮಣಿ ಶರ್ಮಾ ಸಂಗೀತ ಚಿತ್ರಕ್ಕಿದೆ. ಕ್ರೇಜಿ ಪ್ಯಾನ್ ಇಂಡಿಯನ್ ಪ್ರಾಜೆಕ್ಟ್ ಡಬಲ್ ಇಸ್ಮಾರ್ಟ್ ಸಿನಿಮಾವನ್ನು ಪುರಿ ಕನೆಕ್ಟ್ ಬ್ಯಾನರ್ ನಡಿ ಪೂರಿ ಜಗನ್ನಾಥ್, ಚಾರ್ಮಿ ಕೌರ್ ನಿರ್ಮಾಣದಲ್ಲಿ ಚಿತ್ರ ಅದ್ಧೂರಿಯಾಗಿ ಮೂಡಿಬರುತ್ತಿದೆ.

Continue Reading

ಟಾಲಿವುಡ್

Kannapp Teaser : ವಿಷ್ಣು ಮಂಚು ನಾಯಕನಾಗಿ ನಟಿಸಿರುವ `ಕಣ್ಣಪ್ಪ’ ಚಿತ್ರದ ಟೀಸರ್‌ ಬಿಡುಗಡೆ

Kannapp Teaser: ಟೀಸರ್‌ ಲಾಂಚ್‌ ವೇಳೆ ಮಾತನಾಡಿದ ಮೋಹನ್ ಬಾಬು, ಪರಮೇಶ್ವರನ ಒಪ್ಪಿಗೆಯ ಮೇರೆಗೆ ನಾವು ಈ ಕಣ್ಣಪ್ಪ ಸಿನಿಮಾ ಮಾಡಿದ್ದೇವೆ. ಅಚ್ಚು ಕಟ್ಟಾಗಿ ಸಿನಿಮಾ ಮೂಡಿ ಬಂದಿದೆ. ಬಹುಭಾಷೆಯ ತಾರೆಯರು ನಮ್ಮ ಸಿನಿಮಾದಲ್ಲಿ ನಟಿಸಿದ್ದಾರೆ. ಅದ್ಧೂರಿಯಾಗಿ ಈ ಸಿನಿಮಾ ನಿರ್ಮಾಣ ಮಾಡಿದ್ದೇನೆ. ಇಡೀ ತಂಡಕ್ಕೆ ನಿಮ್ಮೆಲ್ಲರ ಆಶೀರ್ವಾದವಿರಲಿ ಎಂದರು.

VISTARANEWS.COM


on

Kannappa Teaser Kannada Vishnu Manchu Mohan Babu
Koo

ಬೆಂಗಳೂರು: ವಿಷ್ಣು ಮಂಚು ಅವರ ಕನಸಿನ ಯೋಜನೆಯಾದ ‘ಕಣ್ಣಪ್ಪ’ (Kannappa Movie) ಎವಿಎ ಎಂಟರ್‌ಟೈನ್‌ಮೆಂಟ್ಸ್ ಮತ್ತು 24 ಫ್ರೇಮ್ಸ್ ಫ್ಯಾಕ್ಟರಿ ಬ್ಯಾನರ್‌ಗಳಲ್ಲಿ ಅದ್ಧೂರಿಯಾಗಿ (Kannapp Teaser) ಚಿತ್ರೀಕರಣಗೊಳ್ಳುತ್ತಿದೆ. ಈ ಚಿತ್ರವನ್ನು ಡಾ.ಮೋಹನ್ ಬಾಬು ನಿರ್ಮಿಸಿದ್ದಾರೆ ಮತ್ತು ಮುಖೇಶ್ ಕುಮಾರ್ ಸಿಂಗ್ ನಿರ್ದೇಶಿಸಿದ್ದಾರೆ. ಶುಕ್ರವಾರ ಈ ಚಿತ್ರದ ಟೀಸರ್ ಬಿಡುಗಡೆಯಾಗಿದ್ದು, ಟೀಸರ್‌ ಲಾಂಚ್ ಕಾರ್ಯಕ್ರಮವನ್ನು ಅಷ್ಟೇ ಅದ್ಧೂರಿಯಾಗಿ ಚಿತ್ರತಂಡ ಆಯೋಜಿಸಲಾಗಿತ್ತು.

ಟೀಸರ್‌ ಲಾಂಚ್‌ ವೇಳೆ ಮಾತನಾಡಿದ ಮೋಹನ್ ಬಾಬು, ಪರಮೇಶ್ವರನ ಒಪ್ಪಿಗೆಯ ಮೇರೆಗೆ ನಾವು ಈ ಕಣ್ಣಪ್ಪ ಸಿನಿಮಾ ಮಾಡಿದ್ದೇವೆ. ಅಚ್ಚು ಕಟ್ಟಾಗಿ ಸಿನಿಮಾ ಮೂಡಿ ಬಂದಿದೆ. ಬಹುಭಾಷೆಯ ತಾರೆಯರು ನಮ್ಮ ಸಿನಿಮಾದಲ್ಲಿ ನಟಿಸಿದ್ದಾರೆ. ಅದ್ಧೂರಿಯಾಗಿ ಈ ಸಿನಿಮಾ ನಿರ್ಮಾಣ ಮಾಡಿದ್ದೇನೆ. ಇಡೀ ತಂಡಕ್ಕೆ ನಿಮ್ಮೆಲ್ಲರ ಆಶೀರ್ವಾದವಿರಲಿ ಎಂದರು.

ವಿಷ್ಣು ಮಂಚು ಹೇಳಿದ್ದೇನು?

“ಮೊದಲ ದಿನದಿಂದ ಇಲ್ಲಿಯವರೆಗೆ ‘ಕಣ್ಣಪ್ಪ’ ಚಿತ್ರವನ್ನು ಪ್ರತಿಯೊಬ್ಬ ಪ್ರೇಕ್ಷಕ ಕುತೂಹಲದಿಂದಲೇ ನೋಡುತ್ತಿದ್ದಾನೆ. ಸಾಮಾಜಿಕ ಜಾಲತಾಣಗಳಲ್ಲಿ ಸಿನಿಮಾಕ್ಕೆ ಸಿಗುತ್ತಿರುವ ಬೆಂಬಲ ನೋಡಿದ್ದೇನೆ. ಇದೀಗ ಆ ಕನಸು ನಿಮ್ಮೆಲ್ಲರ ಮುಂದೆ ತೆರೆದಿಡುವ ಹಂತಕ್ಕೆ ಬಂದಿದೆ. ಕಣ್ಣಪ್ಪ ಸಿನಿಮಾ ಪಯಣ 2014 -15ರಲ್ಲಿ ಶುರುವಾಗಿತ್ತು. ತಂದೆ ಮೋಹನ್ ಬಾಬು, ವಿನ್ನಿ ಮತ್ತು ಸಹೋದರ ವಿನಯ್ ಅವರ ಪ್ರೋತ್ಸಾಹದಿಂದಾಗಿ ಇದೀಗ ಅದು ಸಿದ್ಧವಾಗುತ್ತಿದೆ”

ಇದನ್ನೂ ಓದಿ: Actor Darshan: ಎಷ್ಟೇ ದಿನ ಆದರೂ ಚಂದ್ರಣ್ಣನ ಶವ ಎತ್ತಲ್ಲ; ಅನು ತಂದೆ ನಿಧನಕ್ಕೆ ಸಂಬಂಧಿಕರ ಕಣ್ಣೀರು

“ಕಣ್ಣಪ್ಪ ಸಿನಿಮಾ ಬರೀ ಇತಿಹಾಸವಲ್ಲ, ಇದು ಎರಡನೇ ಶತಮಾನದ ಚೋಳರ ಕಾಲದ ಕಥೆ ಎಂದು ಶಂಕರಾಚಾರ್ಯರು ಹೇಳಿದ್ದರು. 14 ನೇ ಶತಮಾನದಲ್ಲಿ ಕವಿ ಧೂರ್ಜಟಿ ಈ ಬಗ್ಗೆ ಬರೆದಿದ್ದಾರೆ. 18ನೇ ಶತಮಾನದಲ್ಲಿ ಬ್ರಿಟಿಷರೂ ಇಂಗ್ಲಿಷ್‌ನಲ್ಲಿ ಇದನ್ನು ಉಲ್ಲೇಖಿಸಿದ್ದಾರೆ. ಇದೆಲ್ಲವನ್ನು ಅಧ್ಯಯನ ನಡೆಸಿ ಈ ಸಿನಿಮಾ ಮಾಡಿದ್ದೇವೆ. ಅಷ್ಟೇ ಎಚ್ಚರಿಕೆಯಿಂದ ಈ ಸಿನಿಮಾ ಮಾಡಿದ್ದೇವೆ” ಎಂದರು ವಿಷ್ಣು ಮಂಚು.

ನಿರ್ದೇಶಕ ಮುಕೇಶ್ ಕುಮಾರ್ ಸಿಂಗ್ ಮಾತನಾಡಿ, ʻʻಕಣ್ಣಪ್ಪ ಚಿತ್ರದ ನನ್ನ ಶಕ್ತಿಯೇ ನನ್ನ ಕಲಾವಿದರು. ವಿಷ್ಣು ಅವರ ನಟನೆ ಮತ್ತು ಅವರು ಎದುರಿಸಿದ ಕಷ್ಟಗಳ ಬಗ್ಗೆ ನಾನು ಹೇಳಲಾರೆ. ಕೊರೆಯುವ ಚಳಿಯಲ್ಲೂ ಇಡೀ ತಂಡ ಶ್ರಮಿಸಿದೆ. ವಿಷ್ಣು, ಶರತ್ ಕುಮಾರ್, ಮೋಹನ್ ಬಾಬು ನನ್ನ ನಿರೀಕ್ಷೆಗೂ ಮೀರಿದ ಬೆಂಬಲ ನೀಡಿದ್ದಾರೆʼʼ ಎಂದರು.

ʻಶರತ್ ಕುಮಾರ್ ಮಾತನಾಡಿ ʻʻ, ಕಣ್ಣಪ್ಪ ಕೇವಲ ಸಿನಿಮಾ ಅಲ್ಲ; ಇದು ನಮ್ಮ ಇತಿಹಾಸ. ಪ್ರತಿಯೊಬ್ಬರೂ ತಮ್ಮ ತಮ್ಮ ಪಾತ್ರಗಳನ್ನು ಜೀವಿಸಿದ್ದಾರೆ. ಈಗಲೂ ನಾವು ಆ ಪಾತ್ರಗಳಲ್ಲಿ ಉಳಿದಿದ್ದೇವೆ. ಅಷ್ಟೊಂದು ಅಚ್ಚುಕಟ್ಟಾಗಿ ಸಿನಿಮಾ ಮೂಡಿಬಂದಿದೆ. ಎಲ್ಲರೂ ಇತಿಹಾಸವನ್ನು ಮರೆಯುತ್ತಿದ್ದಾರೆ. ನಾವು ನಮ್ಮ ಇತಿಹಾಸವನ್ನು ಹೇಳಬೇಕು. ಎಲ್ಲರೂ ಕಣ್ಣಪ್ಪನನ್ನು ನೋಡಬೇಕು” ಎಂದು ಹೇಳಿದರು.

ಮಧುಬಾಲಾ ಮಾತನಾಡಿ, “ಕಣ್ಣಪ್ಪನಂಥ ಪ್ರಾಜೆಕ್ಟ್‌ನಲ್ಲಿ ನಟಿಸಲು ನನಗೆ ಸಂತೋಷ ಮತ್ತು ಹೆಮ್ಮೆ ಇದೆ. ನನಗೆ ಇಂತಹ ಒಳ್ಳೆಯ ಅವಕಾಶ ನೀಡಿದ ಮೋಹನ್ ಬಾಬು ಮತ್ತು ವಿಷ್ಣು ಅವರಿಗೆ ಧನ್ಯವಾದಗಳು. ವಿಷ್ಣು ಮಂಚು ಅವರಿಗೆ ಸಿನಿಮಾ ನಿರ್ಮಾಣದಲ್ಲಿ ಸಾಕಷ್ಟು ಜ್ಞಾನವಿದೆ. ವಿಷ್ಣು ಅವರಂತಹವರು ಈ ಸಿನಿಮಾ ಮೂಲಕ ದೊಡ್ಡ ರಿಸ್ಕ್‌ ತೆಗೆದುಕೊಂಡಿದ್ದಾರೆ. ಒಂದು ದೊಡ್ಡ ಯಜ್ಞದಲ್ಲಿ ಪಾಲ್ಗೊಂಡಂತೆ ಭಾಸವಾಯಿತು” ಎಂದಿದ್ದಾರೆ.

 ‘ಕಣ್ಣಪ್ಪ’ ಸಿನಿಮಾವು ಪ್ಯಾನ್ ಇಂಡಿಯಾ ಸಿನಿಮಾ ಆಗಿದ್ದು ಹಲವು ಭಾಷೆಗಳಲ್ಲಿ ಬಿಡುಗಡೆ ಆಗಲಿದೆ. ಕಾಳಹಸ್ತಿಯಲ್ಲಿ ಸಿನಿಮಾದ ಮುಹೂರ್ತ ಮಾಡಲಾಗಿತ್ತು. ತೆಲುಗಿನಲ್ಲೂ ಕೃಷ್ಣಂರಾಜು ‘ಭಕ್ತ ಕಣ್ಣಪ್ಪ’ ಚಿತ್ರದಲ್ಲಿ ನಟಿಸಿದ್ದರು.

Continue Reading

Latest

Akira Nandan: ಅಕಿರಾ ನಂದನ್‌; ಆರೂವರೆ ಅಡಿ ಎತ್ತರದ ಪವನ್ ಕಲ್ಯಾಣ್ ಪುತ್ರನಿಗೆ ಭಾರಿ ಡಿಮ್ಯಾಂಡ್‌!

Akira Nandan: ಪವನ್ ಕಲ್ಯಾಣ್ ಪುತ್ರ ಅಕಿರಾ ನಂದನ್ ಇಂಟರ್ನೆಟ್ ನಲ್ಲಿ ಭಾರೀ ಸಂಚಲನ ಮೂಡಿಸಿದ್ದಾನೆ. ಅಕಿರಾ ನಂದನ್ ಯಾರು ಎನ್ನುವುದರ ಕುರಿತು ಜನರು ಸಿಕ್ಕಾಪಟ್ಟೆ ಹುಡುಕುತ್ತಿದ್ದಾರೆ. ಪವನ್ ಕಲ್ಯಾಣ್ ಹಾಗೂ ರೇಣು ದೇಸಾಯಿ ಪುತ್ರನಾದ ಅಕಿರಾ ನಂದನ್‌ಗೆ ಕ್ರಿಕೆಟ್, ಡ್ಯಾನ್ಸ್ ಬಗ್ಗೆ ವಿಪರೀತವಾದ ಒಲವಿದೆಯಂತೆ. ಹಾಗೇ ಪಿಯಾನೋ ಕೂಡ ಇವನ ಇಷ್ಟದ ಪಟ್ಟಿಯಲ್ಲಿದೆ. ವಿಧಾನ ಸಭಾ ಚುನಾವಣೆಯಲ್ಲಿ ಗೆಲುವಿನ ನಗೆ ಬೀರಿದ ಪವನ್ ಕಲ್ಯಾಣ್ ತಮ್ಮ ಮಗ ಅಕಿರಾ ನಂದನ್ ಹಾಗೂ ತನ್ನ ಮೂರನೇ ಪತ್ನಿ ಅನ್ನಾ ಲೆಜ್ನೋವಾ ಅವರೊಂದಿಗೆ ಪ್ರಧಾನಿ ಮೋದಿ ಅವರನ್ನು ಭೇಟಿ ಮಾಡಿದ್ದಾರೆ.

VISTARANEWS.COM


on

Pawan Kalyan
Koo

ಹೈದರಾಬಾದ್ : ಖ್ಯಾತ ಟಾಲಿವುಡ್ ನಟ ಪವನ್ ಕಲ್ಯಾಣ್ (Akira Nandan) ಅವರು ಸಿನಿಮಾ ರಂಗದಲ್ಲಿ ಹೆಸರು ಮಾಡಿ ನಂತರ ರಾಜಕೀಯಕ್ಕೆ ಕಾಲಿಟ್ಟಿದ್ದಾರೆ. ಇದೀಗ ಅವರು 2024ರ ವಿಧಾನಸಭೆ ಚುನಾವಣೆಯಲ್ಲಿ ಗೆದ್ದು ತಮ್ಮ ಆಡಳಿತವನ್ನು ಕೈಗೆ ತೆಗೆದುಕೊಂಡಿದ್ದಾರೆ. ಚುನಾವಣೆಯ ನಂತರ ಅವರು ತಮ್ಮ ಹಿರಿಯ ಪುತ್ರ ಅಕಿರಾ ನಂದನ್ ಜೊತೆ ಪ್ರಧಾನಿ ನರೇಂದ್ರ ಮೋದಿಯವರನ್ನು ಭೇಟಿ ಮಾಡಿದ್ದಾರೆ. ಹಾಗಾಗಿ ಇದೀಗ ಅಕಿರಾ ನಂದನ್ ಇಂಟರ್‌ನೆಟ್ ನಲ್ಲಿ ಭಾರೀ ಸಂಚಲನ ಮೂಡಿಸಿದ್ದಾನೆ. ಅವನು ಯಾರು ಎನ್ನುವುದರ ಬಗ್ಗೆ ಜನರು ಹುಡುಕಾಟ ಮಾಡುತ್ತಿದ್ದಾರೆ, ಹಾಗಾಗಿ ಅಕಿರಾ ನಂದನ್ ಬಗ್ಗೆ ಇಲ್ಲಿದೆ ಮಾಹಿತಿ.

ಅಕಿರಾ ನಂದನ್, ಪವನ್ ಕಲ್ಯಾಣ್ ಅವರ ಮೊದಲ ಪುತ್ರ. ಅಕಿರಾ ನಂದನ್ ಏಪ್ರಿಲ್ 8, 2004ರಲ್ಲಿ ಪವನ್ ಕಲ್ಯಾಣ್ ಮತ್ತು ಅವರ ಮಾಜಿ ಪತ್ನಿ ರೇಣು ದೇಸಾಯಿ ದಂಪತಿಯ ಪುತ್ರನಾಗಿ ಜನಿಸಿದ್ದ. ಅವನಿಗೆ ಆಧ್ಯಾ ಕೊನಿಡೆಲಾ ಎಂಬ ತಂಗಿಯೂ ಇದ್ದಾಳೆ. ಇನ್ನು ಅಕಿರಾ ನಂದನ್ ಬಣ್ಣದ ಲೋಕದಲ್ಲೂ ಕಾಣಿಸಿಕೊಂಡಿದ್ದಾನೆ. ತನ್ನ ತಾಯಿ ನಿರ್ದೇಶನದ ‘ಇಷ್ಕ್ ವಾಲಾ ಲವ್’ (2014) ಚಿತ್ರದಲ್ಲಿ ನಟಿಸಿದ್ದ. ಆತ ನಟನೆಯಲ್ಲಿ ಮುಂದುವರಿಯುತ್ತಾನೆ ಎಂಬ ಊಹಾಪೋಹಗಳು ಕೇಳಿ ಬಂದ ಕಾರಣ ತಾಯಿ ರೇಣು ದೇಸಾಯಿ ತಮ್ಮ ಮಗನಿಗೆ ಈಗ ನಟನೆಯಲ್ಲಿ ಆಸಕ್ತಿ ಇಲ್ಲ ಎಂದು ತಿಳಿಸಿದ್ದಾರೆ.

ಅಕಿರಾಗೆ ಕ್ರಿಕೆಟ್‌, ಡ್ಯಾನ್ಸ್ ಬಗ್ಗೆ ವಿಪರೀತವಾದ ಒಲವಿದೆಯಂತೆ. ಹಾಗೆಯೇ ಪಿಯಾನೋ ಕೂಡ ಇವನ ಇಷ್ಟದ ಪಟ್ಟಿಯಲ್ಲಿದೆ. ಹಾಗಾಗಿ ಅಕಿರಾ ಮುಂದೆ ಯಾವುದರಲ್ಲಿ ತನ್ನನ್ನು ತೊಡಗಿಸಿಕೊಳ್ಳುತ್ತಾನೆ ಎಂಬುದನ್ನು ನೋಡಬೇಕಿದೆ.
ಅಕಿರಾ ನಂದನ್ ಆಗಾಗ ತಂದೆ ಪವನ್ ಕಲ್ಯಾಣ ಜೊತೆ ಸಾರ್ವಜನಿಕವಾಗಿ ಕಾಣಿಸಿಕೊಳ್ಳುತ್ತಿದ್ದು, ವಿಧಾನ ಸಭಾ ಚುನಾವಣೆಯಲ್ಲಿ ಪವನ್ ಕಲ್ಯಾಣ್ ಅವರ ಐತಿಹಾಸಿಕ ಗೆಲುವಿನ ನಂತರ ಅವರು ತಮ್ಮ ಮಗ ಅಕಿರಾ ನಂದನ್ ಹಾಗೂ ತನ್ನ ಮೂರನೇ ಪತ್ನಿ ಅನ್ನಾ ಲೆಜ್ನೋವಾ ಅವರೊಂದಿಗೆ ಪ್ರಧಾನಿ ಮೋದಿ ಅವರನ್ನು ಭೇಟಿ ಮಾಡಲು ಇತ್ತೀಚೆಗೆ ನವದೆಹಲಿಗೆ ತೆರಳಿದ್ದರು. ಅಂದ ಹಾಗೆ ಅಕಿರಾ ನಂದನ್‌ 6 ಅಡಿ 4 ಇಂಚು ಎತ್ತರ ಇದ್ದಾನೆ.

ಇದನ್ನೂ ಓದಿ: Baby Death: ಆಟವಾಡುತ್ತ 7ನೇ ಮಹಡಿ ಬಾಲ್ಕನಿಯಿಂದ ಕೆಳಗೆ ಬಿದ್ದ ಮಗು; ವಿಡಿಯೊ ಇದೆ

ಪವನ್ ಕಲ್ಯಾಣ್ ಅವರ ಮಾಜಿ ಪತ್ನಿ, ಅಕಿರಾ ನಂದನ್ ತಾಯಿ ರೇಣು ದೇಸಾಯಿ ಇತ್ತೀಚೆಗೆ ತಮ್ಮ ಎರಡನೇ ಮದುವೆ ಬಗ್ಗೆ ಪ್ರಸ್ತಾಪ ಮಾಡಿದ್ದರು. ತಾವು ಎರಡನೇ ಮದುವೆಯಾಗುವ ಬಗ್ಗೆ ಸಂದರ್ಶನವೊಂದರಲ್ಲಿ ಸ್ಪಷ್ಟನೆ ನೀಡಿದ್ದರು. ಇಷ್ಟು ವರ್ಷಗಳ ಕಾಲ ಮಕ್ಕಳ ಆರೈಕೆಗಾಗಿ ಮದುವೆಯಾಗಿಲ್ಲ. ಈಗ ಮಕ್ಕಳು ಬೆಳೆದು ದೊಡ್ಡವರಾದ ಕಾರಣ ತಾನು ಎರಡನೇ ಮದುವೆ ಮಾಡಿಕೊಳ್ಳುವುದಾಗಿ ಬಹಿರಂಗಪಡಿಸಿದ್ದರು. ಇದಕ್ಕೆ ತಮ್ಮ ಮಕ್ಕಳ ಒಪ್ಪಿಗೆ ಕೂಡ ಇದೆ ಎಂಬುದಾಗಿ ತಿಳಿಸಿದ್ದರು.

Continue Reading

ಟಾಲಿವುಡ್

Pawan Kalyan: ಪವನ್‌ ಕಲ್ಯಾಣ್‌ ಗೆದ್ದ ಬಳಿಕ ತಲೆಗೂದಲಿಗೆ ಕತ್ತರಿ ಹಾಕಿದ ಡೈ ಹಾರ್ಡ್​ ಫ್ಯಾನ್!

Pawan Kalyan: ತೋಟ ನರೇಂದ್ರ ಉರು ತೆನಾಲಿ ಸಮೀಪದ ಕೊಳಕಲೂರು. 2019ನೇ ಚುನಾವಣೆಯಲ್ಲಿ ತಮ್ಮ ನೆಚ್ಚಿನ ನಟ ಪವನ್ ಕಲ್ಯಾಣ್ ಅವರು ಸ್ಪರ್ಧಿಸಿದ್ದ ಎರಡೂ ಕ್ಷೇತ್ರಗಳಲ್ಲಿ ಸೋತಿದ್ದರು. ಇದರಿಂದ ನರೇಂದ್ರ ತೀವ್ರ ಖಿನ್ನತೆಗೆ ಒಳಗಾಗಿದ್ದರು. ಎರಡು ಕಡೆ ಭಾರಿ ನಿರೀಕ್ಷೆ ಇಟ್ಟುಕೊಂಡಿದ್ದ ನರೇಂದ್ರ ಅವರಿಗೆ ಪವನ್‌ ಕಲ್ಯಾಣ್‌ ಸೋಲು ಭಾರಿ ನೋವುಂಟು ಮಾಡಿತ್ತು.

VISTARANEWS.COM


on

Pawan Kalyan Fan Narendra cut hairs after Five Years
Koo

ಬೆಂಗಳೂರು: ಇತ್ತೀಚೆಗೆ ನಡೆದ ಆಂಧ್ರ ಪ್ರದೇಶ ವಿಧಾನಸಭಾ ಚುನಾವಣೆಯಲ್ಲಿ ಚಂದ್ರಬಾಬು ನಾಯ್ಡು ನೇತೃತ್ವದ ಟಿಡಿಪಿ (Telugu Desam Party), ಬಿಜೆಪಿ ಮತ್ತು ಪವನ್‌ ಕಲ್ಯಾಣ್‌ ನೇತೃತ್ವದ ಜನಸೇನಾ ಪಾರ್ಟಿ (Jana Sena Party)ಯ ಎನ್‌ಡಿಎ (NDA) ಒಕ್ಕೂಟ ಭರ್ಜರಿ ಬಹುಮತ ಪಡೆದು ಅಧಿಕಾರಕ್ಕೆ ಬಂದಿದೆ. ಮುಖ್ಯಮಂತ್ರಿಯಾಗಿ ಚಂದ್ರಬಾಬು ನಾಯ್ಡು ಇಂದು (ಜೂನ್‌ 12) ಪ್ರಮಾಣ ವಚನ ಸ್ವೀಕರಿಸಿದ್ದಾರೆ. ಇದೇ ವೇಳೆ ಉಪ ಮುಖ್ಯಮಂತ್ರಿಯಾಗಿ ಪವನ್‌ ಕಲ್ಯಾಣ್‌ (Pawan Kalyan) ಅಧಿಕಾರ ವಹಿಸಿಕೊಂಡರು. 2019ರ ಚುನಾವಣೆಯಲ್ಲಿ ಪವನ್‌ ಕಲ್ಯಾಣ್‌ ಎರಡೂ ಕ್ಷೇತ್ರಗಳಲ್ಲಿ ಸೋತು ನಗೆಪಾಟಲಿಗೀಡಾಗಿದ್ದರು. ಆ ಸಮಯದಲ್ಲಿ ಪವನ್‌ ಅವರ ಫ್ಯಾನ್‌ ತೋಟ ನರೇಂದ್ರ ಅವರು ಪವನ್ ಗೆದ್ದೇ ಗೆಲ್ಲುತ್ತಾರೆಂದು ಸವಾಲು ಹಾಕಿ, ಪವನ್ ಗೆಲ್ಲುವವರೆಗೂ ತಲೆಗೂದಲು ಕತ್ತರಿವುದಿಲ್ಲ ಎಂದು ಪ್ರಮಾಣ ಮಾಡಿದ್ದರು. ಇದೀಗ ಕೂದಲಿಗೆ ಕತ್ತರಿ ಹಾಕಿದ್ದಾರೆ.

ತೋಟ ನರೇಂದ್ರ ಉರು ತೆನಾಲಿ ಸಮೀಪದ ಕೊಳಕಲೂರು. 2019ನೇ ಚುನಾವಣೆಯಲ್ಲಿ ತಮ್ಮ ನೆಚ್ಚಿನ ನಟ ಪವನ್ ಕಲ್ಯಾಣ್ ಅವರು ಸ್ಪರ್ಧಿಸಿದ್ದ ಎರಡೂ ಕ್ಷೇತ್ರಗಳಲ್ಲಿ ಸೋತಿದ್ದರು. ಇದರಿಂದ ನರೇಂದ್ರ ತೀವ್ರ ಖಿನ್ನತೆಗೆ ಒಳಗಾಗಿದ್ದರು. ಎರಡು ಕಡೆ ಭಾರಿ ನಿರೀಕ್ಷೆ ಇಟ್ಟುಕೊಂಡಿದ್ದ ನರೇಂದ್ರ ಅವರಿಗೆ ಪವನ್‌ ಕಲ್ಯಾಣ್‌ ಸೋಲು ಭಾರಿ ನೋವುಂಟು ಮಾಡಿತ್ತು. ಹಾಗಾಗಿ ಆ ಸಮಯದಲ್ಲಿ ನರೇಂದ್ರ ಅವರು ಪ್ರಮಾಣ ಮಾಡಿದರು. ಪವನ್ ಕಲ್ಯಾಣ್ ಗೆದ್ದು ವಿಧಾನಸಭೆಗೆ ಕಾಲಿಡುವವರೆಗೂ ಕೂದಲಿಗೆ ಕತ್ತರಿ ಹಾಕಲ್ಲ ಎಂದು. ಇದೀಗ ಉಪ ಮುಖ್ಯಮಂತ್ರಿಯಾಗಿ ಪವನ್‌ ಕಲ್ಯಾಣ್‌ (Pawan Kalyan) ಅಧಿಕಾರ ವಹಿಸಿಕೊಂಡಿದ್ದಾರೆ. ಐದು ವರ್ಷಗಳ ಕಾಲ ಕೂದಲು ಬೆಳೆಸುತ್ತಲೇ ಪಕ್ಷಕ್ಕಾಗಿ ದುಡಿದ ನರೇಂದ್ರ ಕೊನೆಗೂ ಕೂದಲಿಗೆ ಕತ್ತರಿ ಹಾಕಿದ್ದಾರೆ.

ಇದನ್ನೂ ಓದಿ: Pawan Kalyan: ಆಂಧ್ರ ಪ್ರದೇಶದ ಉಪ ಮುಖ್ಯಮಂತ್ರಿಯಾಗಿ ಪವನ್‌ ಕಲ್ಯಾಣ್‌ ಆಯ್ಕೆ; ಇಂದು ಪ್ರಮಾಣ ವಚನ ಸ್ವೀಕಾರ

ಪವನ್ ಕಲ್ಯಾಣ್ ಸೇರಿದಂತೆ ಜನಸೇನಾದ 21 ಅಭ್ಯರ್ಥಿಗಳು ಈ ಬಾರಿ ಆಂಧ್ರ ಪ್ರದೇಶ ವಿಧಾನಸಭೆ ಚುನಾವಣೆಗೆ ಸ್ಪರ್ಧೆ ಮಾಡಿದ್ದರು. ಪವನ್ ಕಲ್ಯಾಣ್ ಪೀಠಾಪುರಂ ಕ್ಷೇತ್ರದಿಂದ ಚುನಾವಣೆ ಎದುರಿಸಿದ್ದರು. ಎದುರಾಳಿ ವೈಸಿಪಿ ಅಭ್ಯರ್ಥಿ ವಂಗಾ ಗೀತ ವಿರುದ್ಧ ಭಾರಿ ಅಂತರದ ಜಯವನ್ನು ಪವನ್ ಕಲ್ಯಾಣ್ ಪಡೆದಿದ್ದಾರೆ. 

ವಿಜಯವಾಡದಲ್ಲಿರುವ ಮೇಧಾ ಐಟಿ ಪಾರ್ಕ್‌ ಬಳಿ ನಡೆದ ಅದ್ಧೂರಿ ಕಾರ್ಯಕ್ರಮದಲ್ಲಿ ಎನ್‌.ಚಂದ್ರಬಾಬು ನಾಯ್ಡು ಅವರು ಮುಖ್ಯಮಂತ್ರಿಯಾಗಿ ಪ್ರಮಾಣವಚನ ಸ್ವೀಕರಿಸಿದರು. ಇದಾದ ಬಳಿಕ ಮೋದಿ ಅವರು ನಾಯ್ಡು ಅವರಿಗೆ ಶುಭ ಕೋರಿದರು. ನಂತರ ಪವನ್‌ ಕಲ್ಯಾಣ್‌ ಅವರು ತಮ್ಮ ಸಹೋದರ ಚಿರಂಜೀವಿ ಕೂಡ ಇಲ್ಲೇ ಇದ್ದಾರೆ ಎಂದು ಮೋದಿ ಅವರಿಗೆ ಹೇಳಿದರು. ಆಗ ಮೋದಿ ಅವರು ಚಿರಂಜೀವಿ ಬಳಿ ಹೋಗಿ, ಅವರ ಹಾಗೂ ಪವನ್‌ ಕಲ್ಯಾಣ್‌ ಕೈ ಹಿಡಿದು ವೇದಿಕೆಗೆ ಕರೆತಂದರು. ಬಳಿಕ ಮೂವರೂ ಕೈ ಎತ್ತಿದರು. ಆ ಮೂಲಕ ಒಗ್ಗಟ್ಟಿನ ಬಲ ಪ್ರದರ್ಶನ ಮಾಡಿದರು.

Continue Reading
Advertisement
BAN vs NEP
ಕ್ರೀಡೆ20 mins ago

BAN vs NEP: ಸೂಪರ್​-8 ಪ್ರವೇಶಿಸಿದ ಬಾಂಗ್ಲಾದೇಶ; ನೇಪಾಳ ವಿರುದ್ಧ 21 ರನ್​ ಗೆಲುವು

Actor Darshan of many acquaintance unknown of darshan
ಸ್ಯಾಂಡಲ್ ವುಡ್25 mins ago

Actor Darshan: ಬಂಧಿತರಲ್ಲಿ ಹಲವರಿಗೆ ದರ್ಶನ್ ನೇರ ಪರಿಚಯವೇ ಇಲ್ವಂತೆ; ʻದಚ್ಚುʼ ಅರೆಸ್ಟ್ ಆದ ಬಳಿಕವೇ ಮುಖಾಮುಖಿ!

Lok Sabha Election Result
Lok Sabha Election 202429 mins ago

Rajat Sharma: ಕಾಂಗ್ರೆಸ್ ನಾಯಕರ ವಿರುದ್ಧ ಖ್ಯಾತ ಪತ್ರಕರ್ತ ಮಾನನಷ್ಟ ಮೊಕದ್ದಮೆ ದಾಖಲಿಸಿದ್ದೇಕೆ?

Flesh-Eating Bacteria
ಆರೋಗ್ಯ40 mins ago

Flesh-Eating Bacteria: ಆತಂಕ ಮೂಡಿಸಿದ ಮಾಂಸ ಭಕ್ಷಕ ಬ್ಯಾಕ್ಟೀರಿಯಾ; ಸೋಂಕು ತಗುಲಿದ 48 ಗಂಟೆಯಲ್ಲೇ ಸಾವು!

CM Siddaramaiah and Vidhanasoudha
ಪ್ರಮುಖ ಸುದ್ದಿ48 mins ago

CM Siddaramaiah: 370 ನಿವೃತ್ತ ಅಧಿಕಾರಿಗಳಿಗೆ ಬಾಗಿಲು ತೋರಿಸಿದ ಸರಕಾರ

Euro 2024
ಕ್ರೀಡೆ55 mins ago

Euro 2024: ಗೆಲುವಿನ ಶುಭಾರಂಭ ಕಂಡ ಇಂಗ್ಲೆಂಡ್​; ರೋಚಕ ಗೆಲುವು ಸಾಧಿಸಿದ ನೆದರ್ಲೆಂಡ್ಸ್

Nayana Nagaraj ginirama serial fame got married with suhas
ಕಿರುತೆರೆ57 mins ago

Nayana Nagaraj: 10 ವರ್ಷದ ಪ್ರೀತಿ! ಮನಮೆಚ್ಚಿದ ಹುಡುಗನ ಜತೆ ಸಪ್ತಪದಿ ತುಳಿದ ʻಗಿಣಿರಾಮʼ ನಟಿ

Auto Launches
ಆಟೋಮೊಬೈಲ್1 hour ago

Auto Launches: ಸ್ಕೋಡಾ ಕುಶಾಕ್‌, ಬಿಎಂಡಬ್ಲ್ಯು ಆರ್ 1300 ಸೇರಿ ಇನ್ನೂ ಹಲವು ಹೊಸ ವಾಹನ ಮಾರುಕಟ್ಟೆಗೆ!

Irregular Periods problem Here are some simple home remedies
ಆರೋಗ್ಯ1 hour ago

Irregular Periods: ಏರುಪೇರಾದ ಋತುಚಕ್ರದ ಸಮಸ್ಯೆಯೇ? ಇಲ್ಲಿವೆ ಸರಳ ಮನೆಮದ್ದುಗಳು!

Drowned in river
ಕ್ರೈಂ2 hours ago

Drowned: ಈಜಲು ಹೋಗಿ ಬಾಲಕರು ನೀರುಪಾಲು; ಕಮಲ ಕೊಯ್ಯಲು ಹೋಗಿ ಕೆಸರಿನಲ್ಲಿ ವ್ಯಕ್ತಿ ಸಮಾಧಿ

Sharmitha Gowda in bikini
ಕಿರುತೆರೆ8 months ago

Geetha Serial Kannada: ನಿದ್ದೆ ಕದ್ದ ಚೋರಿ! ನಟಿ `ಭಾನುಮತಿ’ ಹಾಟ್‌ ಪೋಟೊಗಳಿಗೆ ಫ್ಯಾನ್ಸ್ ಫುಲ್ ಫಿದಾ

Kannada Serials
ಕಿರುತೆರೆ8 months ago

Kannada Serials TRP: 2ನೇ ಸ್ಥಾನದಲ್ಲಿ 2 ಧಾರಾವಾಹಿಗಳು; ಟಿಆರ್‌ಪಿ ರೇಸ್‌ನಲ್ಲಿಲ್ಲ ಭಾಗ್ಯಲಕ್ಷ್ಮೀ!

Bigg Boss- Saregamapa 20 average TRP
ಕಿರುತೆರೆ8 months ago

Kannada Serials TRP: ಏಳನೇ ಸ್ಥಾನಕ್ಕೆ ʻಅಮೃತಧಾರೆʼ ಕುಸಿತ; ಬಿಗ್‌ ಬಾಸ್‌-ಸರಿಗಮಪ ಟಿಆರ್‌ಪಿ ಎಷ್ಟು?

galipata neetu
ಕಿರುತೆರೆ7 months ago

Kanyadana Serial: ಕಿರುತೆರೆಗೆ ಮತ್ತೆ ಎಂಟ್ರಿ ಕೊಟ್ಟ ʻಗಾಳಿಪಟʼ ಖ್ಯಾತಿಯ ʻನೀತುʼ!

Kannada Serials
ಕಿರುತೆರೆ9 months ago

Kannada Serials TRP: ನಾಲ್ಕನೇ ಸ್ಥಾನಕ್ಕೆ ಕುಸಿತ ಕಂಡ ʻಸೀತಾ ರಾಮʼ; ಟಿಆರ್‌ಪಿ ರೇಸ್‌ಗೆ ʻಭಾಗ್ಯಲಕ್ಷ್ಮಿʼ ಬ್ಯಾಕ್‌!

Kannada Serials
ಕಿರುತೆರೆ8 months ago

Kannada Serials TRP: ಟಿಆರ್‌ಪಿಯಲ್ಲಿ ʻಭಾಗ್ಯಲಕ್ಷ್ಮೀʼ ಹವಾ; ʻಪುಟ್ಟಕ್ಕನ ಮಕ್ಕಳುʼ ಧಾರಾವಾಹಿಗೆ ಸಂಕಷ್ಟ!

Bigg Boss' dominates TRP; Sita Rama fell to the sixth position
ಕಿರುತೆರೆ8 months ago

Kannada Serials TRP: ಟಿಆರ್‌ಪಿಯಲ್ಲಿ ʻಬಿಗ್ ಬಾಸ್ʼದೇ ಮೇಲುಗೈ; 6ನೇ ಸ್ಥಾನಕ್ಕೆ ಕುಸಿದ ʻಸೀತಾ ರಾಮʼ

geetha serial Dhanush gowda engagement
ಕಿರುತೆರೆ6 months ago

Dhanush Gowda: ಗೀತಾ ಧಾರಾವಾಹಿ ನಟನ ನಿಶ್ಚಿತಾರ್ಥ; ಭವ್ಯಾಳ ಕಮೆಂಟ್‌ ಬಾಕ್ಸ್‌ ಆಫ್‌!

varun
ಕಿರುತೆರೆ7 months ago

Brindavana Serial: ʼಬೃಂದಾವನʼ ಧಾರಾವಾಹಿಯಲ್ಲಿ ದೊಡ್ಡ ಟ್ವಿಸ್ಟ್‌; ಪ್ರಮುಖ ಪಾತ್ರಧಾರಿಯೇ ಬದಲು

Kannada Serials
ಕಿರುತೆರೆ9 months ago

Kannada Serials TRP: ಟಿಆರ್‌ಪಿಯಲ್ಲಿ ಏರಿಕೆ ಕಂಡ ʻಅಮೃತಧಾರೆʼ; ʻಗಟ್ಟಿಮೇಳʼಕ್ಕೆ ನಾಲ್ಕನೇ ಸ್ಥಾನ!

Renukaswamy murder case The location of the accused is complete
ಸಿನಿಮಾ15 hours ago

Renuka Swamy murder : ಭೀಕರವಾಗಿ ಕೊಂದರೂ ಆರೋಪಿಗಳಿಗೆ ಕಾಡುತ್ತಿಲ್ವಾ ಪಾಪಪ್ರಜ್ಞೆ? ನಗುತ್ತಲೇ ಹೊರಬಂದ ಪವಿತ್ರಾ ಗೌಡ, ಪವನ್‌

Renuka swamy murder
ಚಿತ್ರದುರ್ಗ16 hours ago

Renuka swamy Murder : ರೇಣುಕಾಸ್ವಾಮಿ ಕುಟುಂಬಸ್ಥರಿಗೆ ಸಾಂತ್ವನ ಹೇಳಿದ ಬಾಳೆಹೊನ್ನೂರು ಶ್ರೀಗಳು

Vijayanagara News
ವಿಜಯನಗರ21 hours ago

Vijayanagara News : ಕೆಲಸಕ್ಕೆ ಚಕ್ಕರ್, ಸಂಬಳಕ್ಕೆ ಹಾಜರ್! ಹಾರಕನಾಳು ಗ್ರಾಪಂ ಪಿಡಿಓಗಾಗಿ ಗ್ರಾಮಸ್ಥರ ಹುಡುಕಾಟ

Actor Darshan
ಯಾದಗಿರಿ2 days ago

Actor Darshan : ಬಾಸ್‌ ಅಂತ ಯಾಕ್‌ ಬಕೆಟ್‌ ಹಿಡಿಯುತ್ತೀರಾ ಅಂದವನಿಗೆ ದರ್ಶನ್ ಅಭಿಮಾನಿಯಿಂದ ಜೀವ ಬೆದರಿಕೆ!

Karnataka Weather Forecast
ಮಳೆ3 days ago

Karnataka Weather : ಕರಾವಳಿ, ಉತ್ತರ ಒಳನಾಡಿನಲ್ಲಿ ವರುಣಾರ್ಭಟ; ನಾಳೆಯು ಹಲವೆಡೆ ಸಿಕ್ಕಾಪಟ್ಟೆ ಮಳೆ

Actor Darshan
ಬೆಂಗಳೂರು3 days ago

Actor Darshan : ರೇಣುಕಾಸ್ವಾಮಿಯನ್ನು ಕಿಡ್ನ್ಯಾಪ್ ಮಾಡಿ ಕರೆತರುವ ದೃಶ್ಯ ಸಿಸಿ ಕ್ಯಾಮೆರಾದಲ್ಲಿ ಸೆರೆ!

actor Darshan
ಬೆಂಗಳೂರು3 days ago

Actor Darshan : ರೇಣುಕಾಸ್ವಾಮಿ ಕೊಲೆ ಕೇಸ್‌ನಲ್ಲಿ ಮತ್ತಿಬ್ಬರು ಸರೆಂಡರ್‌; ಆರೋಪಿಗಳ ಸಂಖ್ಯೆ 16ಕ್ಕೆ ಏರಿಕೆ

Actor Darshan
ಸಿನಿಮಾ3 days ago

Actor Darshan : ರೇಣುಕಾಸ್ವಾಮಿ ‌ಮೃತದೇಹ ಬಿಸಾಡಿ ಬಳಿಕ ಸಾಕ್ಷ್ಯಇದ್ದ 2 ಮೊಬೈಲ್‌ಗಳನ್ನು ಮೋರಿಗೆ ಎಸೆದ್ರಾ ಆರೋಪಿಗಳು?

karnataka weather Forecast
ಮಳೆ6 days ago

Karnataka Weather : ಭಾರಿ ಮಳೆಗೆ ಗುಡ್ಡದಿಂದ ಉರುಳಿ ಬಿದ್ದ ಬಂಡೆಗಲ್ಲು; ಬೆಂಗಳೂರಲ್ಲೂ ಸಂಜೆ ವರ್ಷಧಾರೆ

actor Darshan
ಚಿತ್ರದುರ್ಗ6 days ago

Actor Darshan: ರೇಣುಕಾ ಸ್ವಾಮಿ ಕೊಲೆ ಕೇಸ್‌ನಲ್ಲಿ ದರ್ಶನ್‌ ಅರೆಸ್ಟ್‌; ಪ್ರಕರಣವನ್ನು ಸಿಬಿಐಗೆ ವಹಿಸಲು ಒತ್ತಾಯ

ಟ್ರೆಂಡಿಂಗ್‌