Rishab Shetty : ಕಾಂತಾರ ಚಾಪ್ಟರ್‌ 1 ನಾಯಕಿ ಯಾರು? ರಿಷಬ್ ಶೆಟ್ಟಿ ಮನದಲ್ಲೇನಿದೆ? - Vistara News

ಸ್ಯಾಂಡಲ್ ವುಡ್

Rishab Shetty : ಕಾಂತಾರ ಚಾಪ್ಟರ್‌ 1 ನಾಯಕಿ ಯಾರು? ರಿಷಬ್ ಶೆಟ್ಟಿ ಮನದಲ್ಲೇನಿದೆ?

Rishab Shetty : ಅಮೆಜಾನ್‌ ಪ್ರೈಂನ ಕಾರ್ಯಕ್ರಮವೊಂದರಲ್ಲಿ ʻಕಾಂತಾರ ಚಾಪ್ಟರ್‌ 1ʼ ಕುರಿತು ರಿಷಬ್‌ ಹೆಚ್ಚೇನು ಮಾಹಿತಿ ಹಂಚಿಕೊಂಡಿಲ್ಲ. ಈ ಸಿನಿಮಾದ ಕಥೆ ಅಥವಾ ಇತರೆ ಮಾಹಿತಿಯ ಸುಳಿವನ್ನು ಸ್ವಲ್ಪವೂ ಬಿಟ್ಟು ಕೊಟ್ಟಿಲ್ಲ.

VISTARANEWS.COM


on

Rishab Shetty
ಮಹತ್ವದ, ಕುತೂಹಲಕರ ಸುದ್ದಿಗಾಗಿ ಫಾಲೊ ಮಾಡಿ
Koo

ಬೆಂಗಳೂರು: ಮುಂಬೈಯಲ್ಲಿ ಮಂಗಳವಾರ (ಮಾರ್ಚ್‌ 19) ನಡೆದ ಅಮೆಜಾನ್‌ ಪ್ರೈಂ ಕಾರ್ಯಕ್ರಮವೊಂದರಲ್ಲಿ ʻಕಾಂತಾರ ಚಾಪ್ಟರ್‌ 1ʼ ಕುರಿತು ರಿಷಬ್‌ ಶೆಟ್ಟಿ (Rishab Shetty) ಹಲವು ವಿಚಾರಗಳನ್ನು ಹಂಚಿಕೊಂಡರು. ಇನ್ನೂ ಶೂಟಿಂಗ್‌ ಆರಂಭಿಸದ ʼಕಾಂತಾರ ಚಾಪ್ಟರ್‌ 1ʼನ ಹಕ್ಕು ಪ್ರಮುಖ ಒಟಿಟಿ ಫ್ಲಾಟ್‌ಫಾರ್ಮ್‌ಗೆ ಕೋಟ್ಯಂತರ ರೂ.ಗೆ ಮಾರಾಟವಾಗಿದೆ ಎನ್ನಲಾಗಿದೆ. ಈ ಸುದ್ದಿ ಕೇಳಿ ಅಭಿಮಾನಿಗಳು ಸಖತ್‌ ಥ್ರಿಲ್‌ ಆಗಿದ್ದಾರೆ. ಕಾಂತಾರ ಚಾಪ್ಟರ್‌ 1ನಲ್ಲಿ ನಾಯಕಿ ಪಾತ್ರಕ್ಕೆ ಯಾರು ಎಂದು ಪ್ರೇಕ್ಷಕರಲ್ಲಿ ಕುತೂಹಲವಿತ್ತು. ಆದರೆ ಈ ಮಾಹಿತಿ ಬಗ್ಗೆ ಇನ್ನೂ ಚಿತ್ರತಂಡ ಹೇಳಿಕೊಳ್ಳುತ್ತಿಲ್ಲ.

ರಿಷಬ್ ಶೆಟ್ಟಿ ಹೇಳಿದ್ದೇನು?

ಈ ಸಿನಿಮಾದ ಕಥೆ ಅಥವಾ ಇತರೆ ಮಾಹಿತಿಯ ಸುಳಿವನ್ನು ಚಿತ್ರತಂಡ ನೀಡುತ್ತಿಲ್ಲ.  ಮೊದಲ ಭಾಗದಲ್ಲಿ ಸಪ್ತಮಿ ಗೌಡ ನಾಯಕಿಯಾಗಿ ಮಿಂಚಿದ್ದರು. ರಿಷಬ್‌ ಜತೆಗೆ ಅವರ ಪಾತ್ರಕ್ಕೂ ಮೆಚ್ಚುಗೆ ಲಭ್ಯವಾಗಿತ್ತು. ಇದೀಗ ಚಾಪ್ಟರ್‌ 1ರಲ್ಲಿ ಅವರು ಅಭಿನಯಿಸಲಿದ್ದಾರಾ ಎನ್ನುವುದು ಗೊತ್ತಾಗಿಲ್ಲ. ಮುಂಬೈಯಲ್ಲಿ ನಡೆದ ಅಮೆಜಾನ್‌ ಪ್ರೈಂನ ಕಾರ್ಯಕ್ರಮದಲ್ಲಿ ಮಾತನಾಡಿದ ನಾಯಕ, ನಿರ್ದೇಶಕ ರಿಷಬ್‌ ಶೆಟ್ಟಿ, ಚಿತ್ರದ ಬಗ್ಗೆ ಒಂದಷ್ಟು ಮಾಹಿತಿ ಹಂಚಿಕೊಂಡಿದ್ದಾರೆ. ʼʼನಮ್ಮ ಹಳ್ಳಿಯ ಕಥೆ ಮತ್ತು ಜಾನಪದವನ್ನು ದೊಡ್ಡ ಪರದೆಗೆ ತರಬೇಕು ಎನ್ನುವುದು ನನ್ನ ಕನಸಾಗಿತ್ತು. ನಾನು ಕಾಲೇಜಿನಲ್ಲಿದ್ದಾಗ ಈ ಕಥೆ ನನ್ನ ಮನಸ್ಸಿನಲ್ಲಿ ಮೂಡಿತ್ತು. ʼಕಾಂತಾರʼ ಚಿತ್ರೀಕರಣದ ಮೊದಲೇ ಪ್ರಿಕ್ವೆಲ್ ಬಗ್ಗೆ ಯೋಚಿಸಿದ್ದೆವು. ಅದಕ್ಕೆ ತಕ್ಕಂತೆ ಪ್ರೇಕ್ಷಕರಿಂದ ನಮಗೆ ಭಾರಿ ಬೆಂಬಲವೂ ಸಿಕ್ಕಿತು. ನಾವು ಈಗ ನಮ್ಮ ಹಳ್ಳಿಯಲ್ಲಿ (ಕುಂದಾಪುರ) ದೊಡ್ಡ ಸೆಟ್ ಹಾಕಿದ್ದೇವೆ. ಶೀಘ್ರದಲ್ಲಿಯೇ ಅಲ್ಲಿ ಚಿತ್ರೀಕರಣ ಆರಂಭಿಸಲಿದ್ದೇವೆʼʼ ಎಂದು ತಿಳಿಸಿದ್ದಾರೆ.

ಇದನ್ನೂ ಓದಿ: Rishab Shetty: ಒಂದೇ ಫ್ರೇಮ್‌ನಲ್ಲಿ ರಿಷಬ್‌, ಜ್ಯೂನಿಯರ್‌ ಎನ್‌ಟಿಆರ್‌, ಪ್ರಶಾಂತ್‌ ನೀಲ್‌: ಫ್ಯಾನ್ಸ್‌ಗೆ ಹೆಚ್ಚಿತು ಕುತೂಹಲ!

ಅಮೇಜಾನ್ ಪ್ರೈಂ ವಿಡಿಯೊ ಪಾಲು

ಕಾಂತಾರ ಒಂದು ದಂತಕಥೆʼ ಎಂದರೆ ಮೊದಲ ಭಾಗ ಅಮೆಜಾನ್ ಪ್ರೈಂನಲ್ಲಿ ಸ್ಟ್ರೀಮಿಂಗ್ ಆಗಿತ್ತು. ಇದೀಗ ಪ್ರೀಕ್ವೆಲ್ ರೈಟ್ಸ್ ಕೂಡ ಅಮೇಜಾನ್ ಪ್ರೈಂ ವಿಡಿಯೊ ಪಾಲಾಗಿದೆ.

“ಕಾಂತಾರ’ ಪ್ರೀಕ್ವೆಲ್ ಸಿನಿಮಾ ತೆರೆಕಂಡು ಒಂದೂವರೆ ತಿಂಗಳ ಬಳಿಕ ಅಮೆಜಾನ್ ಪ್ರೈಂನಲ್ಲಿ ಸ್ಟ್ರೀಮಿಂಗ್ ಆಗುವ ಸಾಧ್ಯತೆಯಿದೆ ಎನ್ನಲಾಗುತ್ತಿದೆ. ʼಕಾಂತಾರʼ ಪ್ಯಾನ್‌ ಇಂಡಿಯಾ ಮಟ್ಟದಲ್ಲಿ ಸದ್ದು ಮಾಡಿತ್ತು. ಹೀಗಾಗಿ ಪ್ರೀಕ್ವೆಲ್ ಕೂಡ ಕನ್ನಡದ ಜತೆಗೆ ವಿವಿಧ ಭಾಷೆಗಳಲ್ಲಿ ತೆರೆಗೆ ಬರಲಿದೆ. ಕೆಲವು ದಿನಗಳ ಹಿಂದೆ ಹೊರ ಬಿದ್ದ ಫಸ್ಟ್‌ ಲುಕ್‌ ಪೋಸ್ಟರ್‌ ದೇಶದ ಗಮನ ಸೆಳೆದಿತ್ತು. ಇದನ್ನೂ ಹೊಂಬಾಳೆ ಫಿಲ್ಮ್ಸ್‌ ನಿರ್ಮಿಸಲಿದ್ದು, ಅಂದಾಜು 125 ಕೋಟಿ ರೂ. ಬಜೆಟ್‌ನಲ್ಲಿ ತಯಾರಾಗುತ್ತಿದೆ ಎನ್ನಲಾಗಿದೆ.

ʼಕಾಂತಾರʼ ಕಥೆ ನಡೆಯುವುದಕ್ಕೆ ಮುನ್ನ ಏನಾಗಿತ್ತು ಎನ್ನುವುದನ್ನು ರಿಷಬ್‌ ಶೆಟ್ಟಿ ಈ ಭಾಗದಲ್ಲಿ ವಿವರಿಸಲಿದ್ದಾರೆ. ಕ್ರಿ.ಶ. 301-400ರ ಕಾಲಘಟ್ಟದ ಕಥೆ ತೆರೆ ಮೇಲೆ ಅನಾವರಣಗೊಳ್ಳಲಿದೆ ಎಂದು ಮೂಲಗಳು ತಿಳಿಸಿವೆ. ಈ ಸಿನಿಮಾ ಪಂಜುರ್ಲಿ ದೈವ ಮತ್ತು ಗುಳಿಗ ದೈವಗಳ ಮೂಲದ ಕಥೆಯನ್ನು ಒಳಗೊಂಡಿದೆ ಎನ್ನಲಾಗುತ್ತಿದೆ.

ಕ್ಷಣ ಕ್ಷಣದ ಮಾಹಿತಿಗಾಗಿ Vistara News FaceBook ಪೇಜ್ ಫಾಲೋ ಮಾಡಿ
ಮಹತ್ವದ ಮಾಹಿತಿಗಾಗಿ ವಿಸ್ತಾರ ನ್ಯೂಸ್ ಆ್ಯಪ್ ಉಚಿತವಾಗಿ ಡೌನ್ ಲೋಡ್ ಮಾಡಿಕೊಳ್ಳಿ: Andriod App | IOS App
Continue Reading
Click to comment

Leave a Reply

Your email address will not be published. Required fields are marked *

ಕರ್ನಾಟಕ

Vidyarthi Vidyarthiniyare Movie: ವಿದ್ಯಾರ್ಥಿ ವಿದ್ಯಾರ್ಥಿನಿಯರೇ ಚಿತ್ರದ ಟ್ರೈಲರ್ ಔಟ್; ಧುಮ್ಮಿಕ್ಕಿದ ಹರೆಯದ ತೊರೆ!

Vidyarthi Vidyarthiniyare Movie: ರ‍್ಯಾಪರ್ ಚಂದನ್ ಶೆಟ್ಟಿ ಅಭಿನಯದ ಬಹು ನಿರೀಕ್ಷಿತ ʼವಿದ್ಯಾರ್ಥಿ ವಿದ್ಯಾರ್ಥಿನಿಯರೇ’ ಚಿತ್ರದ ಟ್ರೈಲರ್‌ ರಿಲೀಸ್‌ ಆಗಿದೆ. ಕಾಲೇಜು ಹುಡುಗ, ಹುಡುಗಿಯರ ಹದಿ ಹರೆಯದ ಹುಚ್ಚು ಮನಸ್ಸಿನ ಹೊಯ್ದಾಟವನ್ನು ಇಲ್ಲಿ ತೆರೆದಿಡಲಾಗಿದೆ.

VISTARANEWS.COM


on

Vidyarthi Vidyarthiniyare Movie
Koo

ಬೆಂಗಳೂರು: ರ‍್ಯಾಪರ್ ಚಂದನ್ ಶೆಟ್ಟಿ ನಾಯಕನಾಗಿ ನಟಿಸಿರುವ ಬಹು ನಿರೀಕ್ಷಿತ ʼವಿದ್ಯಾರ್ಥಿ ವಿದ್ಯಾರ್ಥಿನಿಯರೇ’ (Vidyarthi Vidyarthiniyare Movie) ಚಿತ್ರವು ಶೀರ್ಷಿಕೆಯಲ್ಲಿಯೇ ಟೀನೇಜ್ ಸ್ಟೋರಿಯ ಕಂಪು ಹೊಂದಿದ್ದು, ಈಗಾಗಲೇ ನಾನಾ ಕ್ರೀಯಾಶೀಲ ಚಟುವಟಿಕೆಗಳ ಮೂಲಕ ಪ್ರೇಕ್ಷಕರನ್ನು ತಲುಪಿತ್ತು. ಆ ಕಾರಣದಿಂದಲೇ ಎಲ್ಲರೂ ಟ್ರೈಲರ್‌ನತ್ತ ದೃಷ್ಟಿ ನೆಟ್ಟಿದ್ದರು. ಇದೀಗ ಚಿತ್ರತಂಡ ಯುವ ಆವೇಗದಿಂದ ತೊನೆದಾಡುತ್ತಿರುವಂತೆ ಭಾಸವಾಗುವ ಟ್ರೈಲರ್ ಅನ್ನು ಬಿಡುಗಡೆಗೊಳಿಸಿದೆ. ಅದರೊಳಗೆ ಹದಿಹರೆಯದ ಮನಸುಗಳ ನಾನಾ ಮಗ್ಗುಲುಗಳು ಹರೆಯದ ತೊರೆಯೊಂದಿಗೆ ಧುಮ್ಮಿಕ್ಕಿ ಹರಿದಿವೆ. ಈ ಟ್ರೈಲರ್ ಅನ್ನು ಸೈಡ್ ಎ ಅಂತ ಹೆಸರಿಸಲಾಗಿದೆ. ಇದನ್ನು ನೋಡುತ್ತಲೇ ಒಟ್ಟಾರೆ ಸಿನಿಮಾದಲ್ಲೇನೋ ಇದೆಯೆಂಬ ಗಟ್ಟಿಯಾದ ಭರವಸೆ ತಂತಾನೇ ಮೂಡುತ್ತದೆ. ಸೈಡ್ ಬಿ ಟ್ರೈಲರ್‌ಗಾಗಿ ಕಾತರವೂ ಮೂಡಿಕೊಳ್ಳುತ್ತೆ. ಅಷ್ಟರಮಟ್ಟಿಗೆ ಈ ಟ್ರೈಲರ್ ಪರಿಣಾಮಕಾರಿಯಾಗಿ ಮೂಡಿ ಬಂದಿದೆ!

ವಿದ್ಯಾರ್ಥಿ ವಿದ್ಯಾರ್ಥಿನಿಯರೇ’ ಟೈಟಲ್ಲೇ ಹೇಳುವಂತೆ ಯೂತ್ಸ್ ಸಬ್ಜೆಕ್ಟ್ ಸಿನಿಮಾ. ಕಾಲೇಜು ಹುಡುಗ, ಹುಡುಗಿಯರ, ಹದಿ ಹರೆಯದ ಹುಚ್ಚು ಮನಸ್ಸಿನ ಹೊಯ್ದಾಟವನ್ನು ಇಲ್ಲಿ ತೆರೆದಿಡಲಾಗಿದೆ. ಹಾಗಂತ ಇದು ಮಾಮೂಲಿಯಾಗೂ ಇದು ಸಿದ್ಧಸೂತ್ರದ ಚೌಕಟ್ಟಿಗೊಳಪಟ್ಟಿಲ್ಲ ಅನ್ನೋದು ಟ್ರೈಲರ್ ಎಳೆಯಲ್ಲಿ ಸ್ಪಷ್ಟವಾಗುತ್ತದೆ. ಹೊಡೆದಾಟ, ಬಡಿದಾಟ, ರ‍್ಯಾಗಿಂಗ್, ಬಿಸಿ ರಕ್ತದ ಹುಡುಗರ ಪುಂಡಾಟಿಕೆ ಸೇರಿ ಇಲ್ಲಿ ಎಲ್ಲವೂ ಇದೆ. ಅದರ ಜೊತೆ ಜೊತೆಗೇ ಶೈಕ್ಷಣಿಕ ಪರಿಸರದ ಕ್ರೌರ್ಯದ ಮುಖವೊಂದನ್ನು ಬಯಲಾಗಿಸುವ ಪ್ರಯತ್ನವೂ ಗಮನ ಸೆಳೆಯುವಂತಿದೆ. ಮೋಜು ಮಸ್ತಿಯಲ್ಲಿ ಮೈಮರೆತ ಮನಸ್ಥಿತಿಗಳ ಕಥೆಯ ಸೂಚನೆಯಿದೆ. ಹಿಡಿತ ತಪ್ಪಿದ ಮಕ್ಕಳನ್ನು ಹಾದಿಗೆ ತರುವ ಯತ್ನವೂ ಇದೆ. ಪ್ರಸ್ತುತ ಕಾಲದ ಟೀನೇಜ್ ಹುಡುಗರ ಕಹಾನಿಯನ್ನು ಎಳೆ ಎಳೆಯಾಗಿ ಬಿಚ್ಚಿಟ್ಟಿದೆ ಟ್ರೈಲರ್.

ಚಂದನ್ ಶೆಟ್ಟಿ ಈ ಚಿತ್ರದ ಮೂಲಕ ಡಿಫರೆಂಟಾಗಿ ಕಾಣಿಸಲಿದ್ದಾರೆಂಬ ನಿಖರ ಮಾಹಿತಿಯನ್ನು ನಿರ್ದೇಶಕ ಅರುಣ್ ಅಮುಕ್ತ ನೀಡುತ್ತಾ ಬಂದಿದ್ದಾರೆ. ಅವರ ಪಾತ್ರವನ್ನು ಅಷ್ಟೇ ಗೌಪ್ಯವಾಗಿ ಕಾಪಾಡಿಕೊಂಡು ಸಿನಿಮಾ ಮೇಲಿನ ಕುತೂಹಲವನ್ನು ಹೆಚ್ಚಿಸಿದೆ ಚಿತ್ರತಂಡ. ಒಟ್ಟಾರೆಯಾಗಿ ಟ್ರೈಲರ್ ನೋಡಿದರೆ ನಿರ್ದೇಶಕರು ಹೊಸದೇನನ್ನೋ ಹೇಳುವ ಪ್ರಯತ್ನ ಮಾಡಿದ್ದಾರೆ ಅನ್ನೋದು ಮೇಲ್ನೋಟಕ್ಕೆ ಎದ್ದು ಕಾಣುತ್ತಿದೆ. ಅರುಣ್ ಅಮುಕ್ತ ಅತ್ಯಂತ ಆಸ್ಥೆಯಿಂದ ಈ ಸಿನಿಮಾವನ್ನು ರೂಪಿಸಿದ್ದಾರೆಂಬುದಕ್ಕೂ ಕೂಡ ಈ ಟ್ರೈಲರಿನಲ್ಲಿ ಸಾಕ್ಷಿಗಳಿವೆ. ಕಾಲೇಜು ಕೇಂದ್ರಿತ ಕಥೆ ಅಂದಾಕ್ಷಣ ಒಂದು ಕಲ್ಪನೆ ಮೊಳೆತುಕೊಳ್ಳುತ್ತದೆ. ಅದನ್ನು ಮೀರಿದ ಆತ್ಮದೊಂದಿಗೆ ಅರುಣ್ ಅಮುಕ್ತ ಈ ಸಿನಿಮಾವನ್ನು ದೃಷ್ಯೀಕರಿಸಿರುವ ಲಕ್ಷಣಗಳಿವೆ. ಈವರೆಗೂ ಹಂತ ಹಂತವಾಗಿ ಕಾಯ್ದುಕೊಂಡಿದ್ದ ಕುತೂಹಲವನ್ನು ಈ ಸೈಡ್ ಎ ಟ್ರೈಲರ್ ಸಾರ್ಥಕಗೊಳಿಸಿದೆ.

ಇದನ್ನೂ ಓದಿ | Turbo Trailer Out: ಮಮ್ಮುಟ್ಟಿ ನಟನೆಯ ‘ಟರ್ಬೋ’ ಟ್ರೈಲರ್‌ ಔಟ್‌: ರಾಜ್‌ ಬಿ ಶೆಟ್ಟಿ ಖದರ್‌ಗೆ ಫ್ಯಾನ್ಸ್‌ ಫಿದಾ!

ಸುಬ್ರಮಣ್ಯ ಕುಕ್ಕೆ ಮತ್ತು ಎ.ಸಿ ಶಿವಲಿಂಗೇಗೌಡ ಈ ಚಿತ್ರವನ್ನು ನಿರ್ಮಾಣ ಮಾಡಿದ್ದಾರೆ. ಶ್ರೀಕಾಂತ್ ಜಿ. ಕಶ್ಯಪ್ ಕಾರ್ಯಕಾರಿ ನಿರ್ಮಾಪಕ, ಕುಮಾರ್ ಗೌಡ ಛಾಯಾಗ್ರಹಣ, ಭರ್ಜರಿ ಚೇತನ್ ಮತ್ತು ವಾಸುಕಿ ವೈಭವ್ ಸಾಹಿತ್ಯ, ಪವನ್ ಗೌಡ ಸಂಕಲನ, ಟೈಗರ್ ಶಿವು, ನರಸಿಂಹ ಸಾಹಸ ನಿರ್ದೇಶನ ಈ ಚಿತ್ರಕ್ಕಿರಲಿದೆ ಅರುಣ್ ಸುರೇಶ್ ಈ ಹಾಡಿಗೆ ಛಾಯಾಗ್ರಹಣ ಮಾಡಿದ್ದಾರೆ. ಚಂದನ್ ಶೆಟ್ಟಿ , ಅಮರ್, ಭಾವನಾ, ಮಾನಸಿ, ವಿವಾನ್, ಭವ್ಯ, ಸುನೀಲ್ ಪುರಾಣಿಕ್, ಅರವಿಂದ ರಾವ್, ಸಿಂಚನಾ, ರಘು ರಾಮನಕೊಪ್ಪ, ಪ್ರಶಾಂತ್ ಸಂಬರ್ಗಿ, ಕಾಕ್ರೋಚ್ ಸುಧಿ ಮುಂತಾದವರು ನಟಿಸಿದ್ದಾರೆ. ಇನ್ನುಳಿದಂತೆ ವಿಜೇತ್ ಕೃಷ್ಣ, ವಾಸು ದೀಕ್ಷಿತ್ ಸಂಗೀತ ನಿರ್ದೇಶನ ಈ ಚಿತ್ರಕ್ಕಿದೆ.

Continue Reading

ಸಿನಿಮಾ

Song Release: ‘ಇದು ನಮ್ ಶಾಲೆ’ ಚಿತ್ರದ ಹಾಡಿನ ಅನಾವರಣ

ಐಪಿಎಸ್ ಅಧಿಕಾರಿ ರವಿ ಡಿ. ಚನ್ನಣ್ಣನವರ್ ಹಾಗೂ ಕರ್ನಾಟಕ ಚಲನಚಿತ್ರ ವಾಣಿಜ್ಯ ಮಂಡಳಿ ಅಧ್ಯಕ್ಷರಾದ ಎನ್.ಎಂ. ಸುರೇಶ್ ಅವರು ಶ್ರೀ ಜೇನುಕಲ್ ಪ್ರೊಡಕ್ಷನ್ ಅವರ “ಇದು ನಮ್ ಶಾಲೆ” ಚಿತ್ರದ ಹಾಡನ್ನು (Song Release) ಇತ್ತೀಚೆಗೆ ಅನಾವರಣಗೊಳಿಸಿದರು.

VISTARANEWS.COM


on

By

Song Release
Koo

ಬೆಂಗಳೂರು: ಶ್ರೀ ಜೇನುಕಲ್ ಪ್ರೊಡಕ್ಷನ್ ಅವರ ಮೊದಲ “ಇದು ನಮ್ ಶಾಲೆ” ಚಿತ್ರದ ಹಾಡುಗಳ ಬಿಡುಗಡೆ (Song Release) ಸಮಾರಂಭ ಇತ್ತೀಚೆಗೆ ನಡೆಯಿತು. ಚಿತ್ರದಲ್ಲಿ ಎರಡು ಹಾಡುಗಳಿದ್ದು, ಮೊದಲ ಹಾಡನ್ನು ಖ್ಯಾತ ಐಪಿಎಸ್ ಅಧಿಕಾರಿ (IPS officer) ರವಿ ಡಿ. ಚನ್ನಣ್ಣವರ್ (Ravi D. Channannavar) ಹಾಗೂ ಎರಡನೇ ಗೀತೆಯನ್ನು ಕರ್ನಾಟಕ ಚಲನಚಿತ್ರ ವಾಣಿಜ್ಯ ಮಂಡಳಿ (Karnataka Board of Film Commerce) ಅಧ್ಯಕ್ಷರಾದ ಎನ್.ಎಂ. ಸುರೇಶ್ (N.M. Suresh) ಅವರು ಅನಾವರಣಗೊಳಿಸಿದರು.

ಇದೇ ಸಮಯದಲ್ಲಿ ಚಿತ್ರದ ಪೋಸ್ಟರ್ ಅನ್ನೂ ಬಿಡುಗಡೆ ಮಾಡಲಾಯಿತು. ಈ ಸಂದರ್ಭದಲ್ಲಿ ಸಾಕಷ್ಟು ಗಣ್ಯರು ಹಾಗೂ ಚಿತ್ರತಂಡದ ಸದಸ್ಯರು ಉಪಸ್ಥಿತರಿದ್ದು ಈ ಸುಂದರ ಸಮಾರಂಭಕ್ಕೆ ಸಾಕ್ಷಿಯಾದರು.

ಕಾರ್ಯಕ್ರಮದ ವೇಳೆ ಮಾತನಾಡಿದ ಐಪಿಎಸ್ ಅಧಿಕಾರಿ ರವಿ ಡಿ ಚನ್ನಣ್ಣನವರ್, ಇದು ಖಾಸಗಿ ಹಾಗೂ ಸರ್ಕಾರಿ ಶಾಲೆಯ ಸುತ್ತಲಿನ ಕಥೆ ಎಂದು ತಿಳಿಸಿದರು.

ನಾನು ಕೂಡ ಸರ್ಕಾರಿ ಶಾಲೆಯಲ್ಲೇ ಕಲಿತು ಐಪಿಎಸ್ ಅಧಿಕಾರಿ ಆಗಿದ್ದೇನೆ. ಸಿನಿಮಾ ಮೂಲಕ ಒಳ್ಳೆಯ ವಿಷಯಗಳನ್ನು ಹೇಳಿದಾಗ ಜನರಿಗೆ ಬೇಗ ತಲಪುತ್ತದೆ. ನನಗೆ ಡಾ| ರಾಜಕುಮಾರ್ ಎಂದರೆ ಪಂಚಪ್ರಾಣ. ಸುದೀಪ್ ಅಭಿನಯದ ಚಿತ್ರಗಳ ಗೆದ್ದೆ ಗೆಲುವೆ ಒಂದು ದಿನ, ಅರಳುವ ಹೂವುಗಳೆ ಹಾಗೂ ಶಿವರಾಜಕುಮಾರ್ ಅವರ ಓಂ ಚಿತ್ರದ ಹೇ ದಿನಕರ ಹಾಡುಗಳು ನನಗೆ ಸ್ಪೂರ್ತಿ.. ಕಾಲೇಜು ದಿನಗಳಲ್ಲಿ ಈ ಹಾಡುಗಳನ್ನು ಕೇಳಿ ಬೆಳೆದವನು ನಾನು ಎಂದು ಹೇಳಿ ಚಿತ್ರತಂಡಕ್ಕೆ ಶುಭ ಹಾರೈಸಿದರು.


ನಿರ್ದೇಶಕ ಕೃಷ್ಣ ಬೆಳ್ತಂಗಡಿ ಮಾತನಾಡಿ, ಸಿನಿಮಾ, ರಾಜಕೀಯ ಸೇರಿದಂತೆ ಅನೇಕ ವಿಭಾಗಗಳಲ್ಲಿ ಪತ್ರಕರ್ತನಾಗಿ ಕಾರ್ಯ ನಿರ್ವಹಿಸರುವ ನಾನು, “ಬಣ್ಣದಕೊಡೆ” ಚಿತ್ರದ ಮೂಲಕ ನಿರ್ದೇಶಕನಾದೆ. “ಇದು ನಮ್ ಶಾಲೆ” ನನ್ನ ನಿರ್ದೇಶನದ ಮೂರನೇ ಚಿತ್ರ. ಇದೊಂದು ಪ್ರಸ್ತುತ ಶಿಕ್ಷಣ ವ್ಯವಸ್ಥೆಯ ಕುರಿತಾದ ಚಿತ್ರ. ಖಾಸಗಿ ಶಾಲೆ ಹಾಗೂ ಸರ್ಕಾರಿ ಶಾಲೆಗಳ ಬಗ್ಗೆ ತಿಳಿಸಿ ಕೊಡುವ ಚಿತ್ರ. ಚಿತ್ರದ ಚಿತ್ರೀಕರಣ ಮುಕ್ತಾಯವಾಗಿ ಸೆನ್ಸರ್ ಕೂಡಾ ಆಗಿದ್ದು, ಬಿಡುಗಡೆಯ ಹೊಸ್ತಿಲಿನಲ್ಲಿದೆ‌. ಅರಸೀಕೆರೆ, ಜೇನುಕಲ್, ಗೀಜಿಹಳ್ಳಿ ಹಾಗೂ ಬೆಂಗಳೂರು ಮುಂತಾದ ಕಡೆ ಚಿತ್ರೀಕರಣ ನಡೆದಿದೆ‌ ಎಂದು ತಿಳಿಸಿದರು.

ರವಿ ಆಚಾರ್ ಚಿತ್ರ ನಿರ್ಮಾಣ ಮಾಡಿದ್ದು, ಅರಸೀಕೆರೆ ಉಮೇಶ್ ಅವರ ಸಹಕಾರ ಚಿತ್ರಕ್ಕಿದೆ. ನಾಗರಾಜ್ ಅದವಾನಿ ಛಾಯಾಗ್ರಾಹಣ, ಹಿತನ್ ಹಾಸನ್ ಸಂಗೀತ ಈ ಸಿನಿಮಾಕ್ಕಿದೆ. ಪುಣ್ಯ ಹಾಗೂ ಪೂಜ್ಯ ಅನ್ನುವ ಇಬ್ಬರು ಹೆಣ್ಣು ಮಕ್ಕಳು ಪ್ರಧಾನ ಭೂಮಿಕೆಯಲ್ಲಿ ಇದ್ದಾರೆ ಎಂದರು.


ಇದನ್ನೂ ಓದಿ: Vijay Surya: ತಾಯಂದಿರ ದಿನ ತನ್ನ ಹೆಸರನ್ನೇ ಬದಲಿಸಿಕೊಂಡ ʻಅಗ್ನಿಸಾಕ್ಷಿ’ ನಟ! ಹೊಸ ಹೆಸರೇನು?

ಶಂಕರ್ ಭಟ್, ಪೂಜಾ ಸುಮನ್, ಈಶ್ವರ್ ದಲ, ಮಲ್ಲಿಕಾರ್ಜುನ್ ತುಮಕೂರು, ಶಿವಲಿಂಗೇಗೌಡ ಮಂಡ್ಯ, ಮುರಳಿಕೃಷ್ಣ, ಬಸವರಾಜ್, ವಾಣಿ ಗೌಡ, ರಾಜು ನಾಯಕ್, ಮಾಸ್ಟರ್ ರಾಮು, ಗಂಗಾ ರವಿ, ಕಲಾ ಉಮೇಶ್ ಮುಂತಾದವರು ಚಿತ್ರದಲ್ಲಿ ಅಭಿನಯಿಸಿದ್ದಾರೆ. ಈ ಸಿನಿಮಾದಲ್ಲಿ ಅರಸೀಕೆರೆ ಜನಪ್ರಿಯ ಶಾಸಕರಾದ ಶಿವಲಿಂಗೇಗೌಡರು ಇದೇ ಮೊದಲ ಬಾರಿಗೆ ಮುಖ್ಯಮಂತ್ರಿ ಪಾತ್ರದಲ್ಲಿ ನಟಿಸಿದ್ದಾರೆ ಎಂದು ಅವರು ತಿಳಿಸಿದರು.

ನಿರ್ಮಾಪಕರಾದ ರವಿ ಆಚಾರ್, ಕಾರ್ಯಕಾರಿ ನಿರ್ಮಾಪಕರಾದ ಅರಸೀಕೆರೆ ಉಮೇಶ್ ಹಾಗೂ ಸಂಗೀತ ನಿರ್ದೇಶಕ ಹಿತನ್ ಹಾಸನ್ “ಇದು ನಮ್ ಶಾಲೆ” ಚಿತ್ರದ ಕುರಿತು ಮಾತನಾಡಿದರು.

Continue Reading

ಸಿನಿಮಾ

Pavithra Jayaram: ಪವಿತ್ರ ಜಯರಾಂಗೆ ಅಂತಿಮ ವಿದಾಯ; ಭಯದಲ್ಲೇ ಪ್ರಾಣ ಬಿಟ್ರಾ ನಟಿ?

Pavithra Jayaram: ನಟಿ ಕರ್ನಾಟಕದಲ್ಲಿ ಹುಟ್ಟಿದ್ದರೂ ಕೂಡ ಹೆಚ್ಚು ಫೇಮಸ್‌ ಆದದ್ದು ತೆಲುಗಿನ ‘ತ್ರಿನಯನಿ’ ಧಾರಾವಾಹಿಯಿಂದ . ಈ ಬಗ್ಗೆ ನಟಿ ಈ ಹಿಂದೆ ಮಾಧ್ಯಮವೊಂದರಲ್ಲಿ ಹೇಳಿಕೊಂಡಿದ್ದರು. ʻʻನಾನು ಹುಟ್ಟಿ ಬೆಳೆದದ್ದು ಕರ್ನಾಟಕದಲ್ಲಿ. ಆದರೆ ಕನ್ನಡಕ್ಕಿಂತ ನನಗೆ ಹೆಚ್ಚು ಹೆಸರು ಕೊಟ್ಟಿದ್ದು ತೆಲುಗು. ‘ತ್ರಿನಯನಿ’ ಧಾರಾವಾಹಿ ಮುಂಚೆ ಅನೇಕ ಕನ್ನಡ ಧಾರಾವಾಹಿಯಲ್ಲಿ ನಟಿಸಿದ್ದರು ಅಷ್ಟಾಗಿ ಫಾಲೋವರ್ಸ್‌ ಇರಲಿಲ್ಲ.

VISTARANEWS.COM


on

Pavithra Jayaram died in the accident may alive if the ambulance arrived
Koo

ಬೆಂಗಳೂರು: ತೆಲುಗಿನ ‘ತ್ರಿನಯನಿ’ ಧಾರಾವಾಹಿ (Trinayani serial) ಜನಪ್ರಿಯರಾಗಿರುವ ಕನ್ನಡತಿ ಪವಿತ್ರ ಜಯರಾಂ (Pavithra Jayaram) ಅಪಘಾತಕ್ಕೀಡಾಗಿ ಸ್ಥಳದಲ್ಲೇ ಮೇ.12ರಂದು ಮೃತಪಟ್ಟಿದ್ದರು. ಆಂಧ್ರಪ್ರದೇಶದ ಕರ್ನೂಲು ಸಮೀಪದಲ್ಲಿ (ಮೇ.12) ಮುಂಜಾನೆ ಅಪಘಾತವಾಗಿತ್ತು. ಮೂಲತಃ ಕನ್ನಡಿಗರಾದ ಪವಿತ್ರ ತೆಲುಗಿನ ತ್ರಿನಯನಿ ಧಾರವಾಹಿಯಲ್ಲಿ ಜನಪ್ರಿಯರಾಗಿದ್ದರು. ಕನ್ನಡದ ʻರೋಬೊ ಫ್ಯಾಮಿಲಿʼ ಮೂಲಕ ಕಿರುತೆರೆಗೆ ಎಂಟ್ರಿಕೊಟ್ಟಿದ್ದ ಪವಿತ್ರ ಮೂಲತಃ ಮಂಡ್ಯ ತಾಲೂಕಿನ ಹನಕೆರೆಯವರು. ನಟಿ ಪ್ರಯಾಣಿಸುತ್ತಿದ್ದ ಕಾರು ಎದುರಿಗೆ ಬಂದ ಬಸ್‌ ಡಿಕ್ಕಿ ಹೊಡದಿತ್ತು. ಅಪಘಾತವಾದ ಕೂಡಲೇ ಆಂಬ್ಯುಲೆನ್ಸ್‌ ಸರಿಯಾದ ಸಮಯಕ್ಕೆ ಬಾರದೆ ಇದ್ದಿದ್ದಕ್ಕೆ ಅಪಘಾತ ಸಂಭವಿಸಿದೆ ಎಂದು ಸಹನಟ ಚಂದ್ರಕಾಂತ್ ಆರೋಪ ಮಾಡಿದ್ದಾರೆ.

ನಟಿ ರೋಬೊ ಫ್ಯಾಮಿಲಿ, ಜೋಕಾಲಿ, ನೀಲಿ, ರಾಧಾರಮಣ ಧಾರವಾಹಿಯಲ್ಲಿ ನಟಿಸಿ ಮನೆಮಾತಾಗಿದ್ದರು. ಇನ್ನು ತೆಲುಗಿನ ‘ನಿನ್ನೆ ಪೆಲ್ಲಡತಾ’ ಅನ್ನೋ ಜನಪ್ರಿಯ ಧಾರಾವಾಹಿಯಲ್ಲೂ ನಟಿಸಿದ್ದರು. ಇದೀಗ ನಟಿಯ ಅಂತ್ಯಕ್ರಿಯೆ ಕೂಡ ನೆರವೇರಿದೆ. ಸಹನಟ ಚಂದ್ರಕಾಂತ್ ಮಾಧ್ಯಮದ ಜತೆ ಮಾತನಾಡಿ ʻʻಪವಿತ್ರಗೆ ಏನು ಗಾಯ ಆಗಿರಲಿಲ್ಲ ಭಯದಲ್ಲೇ ಉಸಿರು ಹೋಯ್ತು. ಅವರಿಗೆ ಏನೂ ಪೆಟ್ಟಾಗಿಲ್ಲ. ಆಂಬ್ಯುಲೆನ್ಸ್ 20 ನಿಮಿಷ ಮುಂಚೆ ಬಂದಿದ್ದರೆ, ಬಹುಶ: ಅವರು ಬದುಕುತ್ತಿದ್ದರು. ಅಪಘಾತವಾದಾಗ ಅವರು ಉಸಿರಾಡುತ್ತಿದ್ದರು” ಎಂದು ಭಾವುಕರಾಗಿ ಹೇಳಿಕೊಂಡಿದ್ದಾರೆ.

ಇದನ್ನೂ ಓದಿ: Pavithra Jayaram: ತೆಲುಗಿನ ‘ತ್ರಿನಯನಿ’ ಧಾರಾವಾಹಿ ನಟಿ, ಕನ್ನಡತಿ ಪವಿತ್ರ ಜಯರಾಂ ಅಪಘಾತದಲ್ಲಿ ನಿಧನ

ಅಪಘಾತವಾದ ಕಾರಿನಲ್ಲಿ ನಟಿ ಪವಿತ್ರಾ ಜೊತೆ ಅವರ ಸಂಬಂಧಿ ಅಪೇಕ್ಷಾ, ಚಾಲಕ ಶ್ರೀಕಾಂತ್, ಸಹನಟ ಚಂದ್ರಕಾಂತ್ ಪ್ರಯಾಣ ಮಾಡುತ್ತಿದ್ದರು. ಇವರೆಲ್ಲರಿಗೂ ಗಂಭೀರ ಗಾಯಗಳಾಗಿ ಆಸ್ಪತ್ರೆಯಲ್ಲಿ ಚಿಕಿತ್ಸೆ ಪಡೆಯುತ್ತಿದ್ದಾರೆ. ಆದರೆ, ಸಹನಟ ಚಂದ್ರಕಾಂತ್ ಚಿಕಿತ್ಸೆ ಪಡೆದು ಪವಿತ್ರ ಜಯರಾಂ ಅಂತ್ಯಕ್ರಿಯೆ ಪಾಲ್ಗೊಂಡಿದ್ದರು.

ನಟಿ ಕರ್ನಾಟಕದಲ್ಲಿ ಹುಟ್ಟಿದ್ದರೂ ಕೂಡ ಹೆಚ್ಚು ಫೇಮಸ್‌ ಆದದ್ದು ತೆಲುಗಿನ ‘ತ್ರಿನಯನಿ’ ಧಾರಾವಾಹಿಯಿಂದ . ಈ ಬಗ್ಗೆ ನಟಿ ಈ ಹಿಂದೆ ಮಾಧ್ಯಮವೊಂದರಲ್ಲಿ ಹೇಳಿಕೊಂಡಿದ್ದರು. ʻʻನಾನು ಹುಟ್ಟಿ ಬೆಳೆದದ್ದು ಕರ್ನಾಟಕದಲ್ಲಿ. ಆದರೆ ಕನ್ನಡಕ್ಕಿಂತ ನನಗೆ ಹೆಚ್ಚು ಹೆಸರು ಕೊಟ್ಟಿದ್ದು ತೆಲುಗು. ‘ತ್ರಿನಯನಿ’ ಧಾರಾವಾಹಿ ಮುಂಚೆ ಅನೇಕ ಕನ್ನಡ ಧಾರಾವಾಹಿಯಲ್ಲಿ ನಟಿಸಿದ್ದರು ಅಷ್ಟಾಗಿ ಫಾಲೋವರ್ಸ್‌ ಇರಲಿಲ್ಲ. ಆದರೆ ‘ತ್ರಿನಯನಿ’ ಧಾರಾವಾಹಿ ಕನ್ನಡದಲ್ಲಿಯೂ ಡಬ್‌ ಆಗುತ್ತಿತ್ತು. ಹೀಗಾಗಿ ಕನ್ನಡದಲ್ಲಿಯೂ ತುಂಬಾ ಫ್ಯಾನ್ ಪೇಜ್‌ಗಳು ಶುರುವಾದವುʼʼ ಎಂದಿದ್ದರು.

Continue Reading

ಸ್ಯಾಂಡಲ್ ವುಡ್

Kannada New Movie: `ಕುಂಟೆಬಿಲ್ಲೆ’ ಸಿನಿಮಾದ ಮುಹೂರ್ತ: ಶುಭಕೋರಿದ ಗಣ್ಯರು

Kannada New Movie: ಪೋಷಕ ಪಾತ್ರಗಳಲ್ಲಿ ಕಿಶೋರ್, ಪವಿತ್ರಾ ಲೋಕೇಶ್, ಶಂಕರ್ ಅಶ್ವಥ್, ಚಂದ್ರಪ್ರಭ ಮೊದಲಾದವರು ನಟಿಸಲಿದ್ದಾರೆ.
ʻನಾವೆಲ್ಲಾ ಚಿಕ್ಕ ವಯಸ್ಸಿನಲ್ಲಿ ಆಡುತ್ತಿದ್ದ ಆಟ ʻಕುಂಟೆಬಿಲ್ಲೆ‌ʼ. ಅದೇ ಟೈಟಲ್ ಇಟ್ಟುಕೊಂಡು ಪ್ರೀತಿ, ನೋವು, ಕಾಮ ಎಲ್ಲವನ್ನೂ ಕಟ್ಟಿಕೊಡಲಿದ್ದೇವೆʼ ಎಂದು ನಿರ್ದೇಶಕ ಸಿದ್ದೇಗೌಡ ತಿಳಿಸಿದರು. ಹತ್ತಕ್ಕೂ ಹೆಚ್ಚು ಚಿತ್ರ ಮಾಡಿರುವ ಮೇಘ ಶ್ರೀ ನಾಯಕಿಯಾಗಿ ಕಾಣಿಸಿಕೊಳ್ಳಲಿದ್ದಾರೆ.

VISTARANEWS.COM


on

Kannada New Movie meghashri starrer kuntebille goes on floor
Koo

ಬೆಂಗಳೂರು: ಈ ಮೊದಲು `ದಕ್ಷ ಯಜ್ಞ’, ತರ್ಲೆ ವಿಲೇಜ್’, ಋತುಮತಿ ಚಿತ್ರಗಳನ್ನು (Kannada New Movie) ನಿರ್ದೇಶನ ಮಾಡಿದ್ದ ಸಿದ್ದೇಗೌಡ ಜಿ.ಬಿ‌.ಎಸ್. ಅವರು `ಕುಂಟೆಬಿಲ್ಲೆ’ ಸಿನಿಮಾ ನಿರ್ದೇಶನಕ್ಕೆ ಮುಂದಾಗಿದ್ದಾರೆ. ಯುವ ನಟ ಯದು ಮೊದಲ ಬಾರಿಗೆ ನಾಯಕರಾಗಿ ಸ್ಯಾಂಡಲ್‌ವುಡ್‌ಗೆ ಎಂಟ್ರಿ ಕೊಡುತ್ತಿದ್ದಾರೆ‌. ಹತ್ತಕ್ಕೂ ಹೆಚ್ಚು (kuntebille goes on floor) ಚಿತ್ರ ಮಾಡಿರುವ ಮೇಘ ಶ್ರೀ ನಾಯಕಿಯಾಗಿ ಕಾಣಿಸಿಕೊಳ್ಳಲಿದ್ದಾರೆ.

ಪೋಷಕ ಪಾತ್ರಗಳಲ್ಲಿ ಕಿಶೋರ್, ಪವಿತ್ರಾ ಲೋಕೇಶ್, ಶಂಕರ್ ಅಶ್ವಥ್, ಚಂದ್ರಪ್ರಭ ಮೊದಲಾದವರು ನಟಿಸಲಿದ್ದಾರೆ.
ʻನಾವೆಲ್ಲಾ ಚಿಕ್ಕ ವಯಸ್ಸಿನಲ್ಲಿ ಆಡುತ್ತಿದ್ದ ಆಟ ʻಕುಂಟೆಬಿಲ್ಲೆ‌ʼ. ಅದೇ ಟೈಟಲ್ ಇಟ್ಟುಕೊಂಡು ಪ್ರೀತಿ, ನೋವು, ಕಾಮ ಎಲ್ಲವನ್ನೂ ಕಟ್ಟಿಕೊಡಲಿದ್ದೇವೆʼ ಎಂದು ನಿರ್ದೇಶಕ ಸಿದ್ದೇಗೌಡ ತಿಳಿಸಿದರು. ನಿರ್ಮಾಪಕ ಎಸ್.ಬಿ. ಶಿವು ಮಾತನಾಡಿ, ʻಜೀವಿತ ಕ್ರಿಯೇಷನ್‌ನಿಂದ ಒಳ್ಳೆಯ ಸಿನಿಮಾ ಮಾಡಿದ್ದೇವೆ. ಯದು ಹೊಸ ಪ್ರತಿಭೆ ಆಗಿದ್ದು ಅವರನ್ನೇ ನಾಯಕರನ್ನಾಗಿ ಮಾಡಿಕೊಂಡಿದ್ದೇವೆʼ ಎಂದರು. ಮತ್ತೊಬ್ಬ ನಿರ್ಮಾಪಕ ಕುಮಾರ್ ಗೌಡ ಮಾತನಾಡಿ,
ʻನಿರ್ಮಾಣ ಕ್ಷೇತ್ರ ನನಗೆ ಹೊಸದು. 30 ವರ್ಷದ ಹಿಂದೆ ನಾನೊಬ್ಬ ಕಲಾವಿದ ಆಗಬೇಕು ಎಂದು ಬೆಂಗಳೂರಿಗೆ ಹೋಗಿದ್ದವನು‌. ಆದರೆ ಅದು ಸಾಧ್ಯವಾಗಿರಲಿಲ್ಲ‌. ಈಗ ಅದನ್ನು ನನ್ನ ಮಗನ ಮೂಲಕ ಈಡೇರಿಸಿಕೊಳ್ಳುತ್ತಿದ್ದೇನೆ. ನನ್ನ ಮಗನಿಗೆ ರಂಗಭೂಮಿ ಕಡೆಗೆ ಆಸಕ್ತಿ ಇತ್ತು . ಇದೀಗ ವಿದ್ಯಾಭ್ಯಾಸ ಮುಗಿಸಿ ನಟನೆ ಕಡೆಗೆ ಬರುತ್ತಿದ್ದಾನೆ. ಈಗ ನಾನೇ ಮುಂದೆ ನಿಂತು ನಿರ್ದೇಶಕ ಸಿದ್ದೇಗೌಡ ಅವರ ಗರಡಿಗೆ ಬಿಟ್ಟಿದ್ದೇವೆ. ನನ್ನ ಮಗನಿಗೆ ಹೊಂದುವಂತ ಒಳ್ಳೆಯ ಕತೆ ಇದೆ. ಸಿನಿಮಾ ಚೆನ್ನಾಗಿ ಮೂಡಿಬರಲಿದೆʼ ಎನ್ನುವ ವಿಶ್ವಾಸ ವ್ಯಕ್ತಪಡಿಸಿದರು‌.

ಇದನ್ನೂ ಓದಿ: Kannada New Movie: ಮನರಂಜನೆಯ ರಸದೌತಣ ಬಡಿಸಲು ಬಂದ ʻಮೂರನೇ ಕೃಷ್ಣಪ್ಪʼ: ಟ್ರೈಲರ್‌ ಔಟ್‌!

ಮೇಘಶ್ರೀ ಮಾತಿಗಿಳಿದು, ʻʻಟೈಟಲ್ ನಷ್ಟೇ ಸ್ಕ್ರಿಪ್ಟ್ ಕೂಡ ಚೆನ್ನಾಗಿದೆ. ಕನ್ನಡದಲ್ಲಿ ಈ ರೀತಿಯ ಸ್ಟೋರಿ ಕೇಳಿರಲಿಲ್ಲ. ಒಳ್ಳೆಯ ತಂಡ ಸಿಕ್ಕಿದ್ದು, ನಾನು ಹಳ್ಳಿಯೊಂದರ ಶ್ರೀಮಂತ ಕುಟುಂಬದ ಹುಡುಗಿಯ ಪಾತ್ರ ಮಾಡಲಿದ್ದೇನೆ ಎಂದರು.
ನಾಯಕ ಯದು ಮಾತನಾಡಿ, ನನ್ನ ಮೇಲೆ ನಂಬಿಕೆ ಇಟ್ಟು ಅವಕಾಶ ಕೊಟ್ಟಿದ್ದಾರೆ‌. ಆ ನಿಟ್ಟಿನಲ್ಲಿ ಪಾತ್ರ ಮಾಡುವೆʼʼ ಎಂದರು.

ಹಿರಿಯ ನಟ ಶಂಕರ್ ಅಶ್ವಥ್ ಮಾತನಾಡಿ, ʻʻಅಕ್ಷಯ ತೃತೀಯ ದಿನದಂದು ಯಾವುದೇ ಒಳ್ಳೆಯ ಕೆಲಸ ಮಾಡಿದರೂ ಒಳ್ಳೆಯದಾಗುತ್ತದೆ ಎನ್ನುವ ನಂಬಿಕೆ ಇದೆ‌. ಅದೇ ರೀತಿ ಈ ಚಿತ್ರಕ್ಕೂ ಒಳ್ಳೆಯದಾಗಲಿ. ನನ್ನದು ನಾಯಕಿಯ ತಂದೆ ಪಾತ್ರ‌. ಒಂದು ಗ್ರಾಮೀಣ ಆಟ ಜೀವನದಲ್ಲಿ ಎಷ್ಟು ಮುಖ್ಯ ಆಗುತ್ತದೆ ಎನ್ನುವುದನ್ನು ಚಿತ್ರದಲ್ಲಿ ಹೇಳಿದ್ದಾರೆ‌. ವಿಭಿನ್ನ ಮತ್ತು ಕುತೂಹಲಕಾರಿ ಚಿತ್ರ ಇದಾಗಿರಲಿದೆʼʼ ಎನ್ನುವ ವಿಶ್ವಾಸ ವ್ಯಕ್ತಪಡಿಸಿದರು.

ಸಂಭಾಷಣೆ ಬರೆದಿರುವ ಮಧು ಮಾತನಾಡಿ ʻʻನಾನು ಪ್ರತಿ ಸಿನಿಮಾಗೆ ಬರೆಯುವಾಗಲೂ ಹೊಸದಾಗಿಯೇ ಬರೆಯುತ್ತೇನೆ. ಈ ಚಿತ್ರದ ಕಥೆ ಚೆನ್ನಾಗಿದೆ. ಅದಕ್ಕೆ ತಕ್ಕಂತೆ ಸಂಭಾಷಣೆ ಬರೆದಿದ್ದೇನೆ. ಹಳ್ಳಿಯ ನೈಜ ಘಟನೆಗಳು ಇಲ್ಲಿ ಇವೆʼʼ ಎಂದು ತಿಳಿಸಿದರು. ಒಂದು ಗ್ರಾಮೀಣ ಆಟ ಜೀವನದಲ್ಲಿ ಎಷ್ಟು ಮುಖ್ಯ ಆಗುತ್ತದೆ ಎನ್ನುವುದು ಚಿತ್ರದಲ್ಲಿ ಇರಲಿದೆ ಎನ್ನಲಾಗಿದೆ. ವಿಭಿನ್ನ ಮತ್ತು ಕುತೂಹಲಕಾರಿ ಚಿತ್ರ ಇದಾಗಿರಲಿದೆ ಎನ್ನುವ ವಿಶ್ವಾಸ ಚಿತ್ರತಂಡದ್ದು.

Continue Reading
Advertisement
Spoken Language
Latest3 mins ago

Spoken Language: ವಿಶ್ವದಲ್ಲಿ ಅತೀ ಹೆಚ್ಚು ಮಾತನಾಡುವ ಭಾಷೆಗಳಲ್ಲಿ ಹಿಂದಿ ಯಾವ ಸ್ಥಾನದಲ್ಲಿದೆ ಗೊತ್ತೆ?

Karnataka Weather Forecast
ಮಳೆ11 mins ago

Karnataka Weather : ಭಾರಿ ಗಾಳಿ, ಮಳೆಗೆ ಶೃಂಗೇರಿಯಲ್ಲಿ ವಿದ್ಯುತ್‌ ಕಡಿತ; ಶಿರಸಿಯಲ್ಲಿ ಉರುಳಿ ಬಿದ್ದ ಮರ

Prajwal Revanna Case
ಕರ್ನಾಟಕ17 mins ago

Prajwal Revanna Case: ಪ್ರೀತಂಗೌಡರ ಮತ್ತಿಬ್ಬರು ಆಪ್ತರ ಹೋಟೆಲ್‌, ಬಾರ್‌ ಮೇಲೆ ಎಸ್‌ಐಟಿ ದಾಳಿ

Warning For Android Users
ಗ್ಯಾಜೆಟ್ಸ್19 mins ago

Warning For Android Users: ಆಂಡ್ರಾಯ್ಡ್ ಬಳಕೆದಾರರಿಗೆ ಕಾದಿದೆ ಅಪಾಯ; ಸರ್ಕಾರದಿಂದ ಗಂಭೀರ ಎಚ್ಚರಿಕೆ

Dog Attack
ದೇಶ25 mins ago

Dog Attack : ಮನೆಯಲ್ಲಿ ಮಲಗಿಸಿದ್ದ ಐದು ತಿಂಗಳ ಮಗುವನ್ನು ಕಚ್ಚಿ ಕೊಂದ ಬೀದಿ ನಾಯಿ!

Fashion Trend
ಫ್ಯಾಷನ್27 mins ago

Fashion Trend: ಯುವತಿಯರನ್ನು ಸೆಳೆದಿರುವ 3 ಶೈಲಿಯ ವೈಟ್‌ ಪ್ಯಾಂಟ್‌ಗಳಿವು!

HSRP Number Plate Registration Deadline Near Will the government impose fines
ಬೆಂಗಳೂರು50 mins ago

HSRP Number Plate: ಬಂದೇ ಬಿಡ್ತು ಎಚ್‌ಎಸ್‌ಆರ್‌ಪಿ ನಂಬರ್‌ ಪ್ಲೇಟ್‌ ನೋಂದಣಿ ಡೆಡ್‌ಲೈನ್‌! ಸರ್ಕಾರದಿಂದ ದಂಡಾಸ್ತ್ರ ಪ್ರಯೋಗ?

kodagu News Woman gives birth to baby in ambulance
ಕೊಡಗು55 mins ago

kodagu News : ಒಮ್ಮಿಂದೊಮ್ಮೆಗೇ ಜೋರಾಯಿತು ನೋವು; ಆಂಬ್ಯುಲೆನ್ಸ್‌ನಲ್ಲೇ ಹೆರಿಗೆ ಮಾಡಿಸಿದ ಸ್ಟಾಫ್‌ ನರ್ಸ್‌

IPL 2024
ಪ್ರಮುಖ ಸುದ್ದಿ56 mins ago

IPL 2024 : ನಾಯಕರಾಗಿ ನೀವೇನು ಮಾಡಿದ್ರಿ? ಪಾಂಡ್ಯನನ್ನು ಟೀಕಿಸಿದ್ದ ವಿಲಿಯರ್ಸ್​ಗೆ ತಿರುಗೇಟು ಕೊಟ್ಟ ಗಂಭೀರ್​

Milk Products
ಆಹಾರ/ಅಡುಗೆ57 mins ago

Milk Products: ಹಾಲು, ಹಾಲಿನ ಉತ್ಪನ್ನ ಸೇವಿಸಿದರೆ ಲಾಭವೋ ನಷ್ಟವೋ?

Sharmitha Gowda in bikini
ಕಿರುತೆರೆ7 months ago

Geetha Serial Kannada: ನಿದ್ದೆ ಕದ್ದ ಚೋರಿ! ನಟಿ `ಭಾನುಮತಿ’ ಹಾಟ್‌ ಪೋಟೊಗಳಿಗೆ ಫ್ಯಾನ್ಸ್ ಫುಲ್ ಫಿದಾ

Kannada Serials
ಕಿರುತೆರೆ7 months ago

Kannada Serials TRP: 2ನೇ ಸ್ಥಾನದಲ್ಲಿ 2 ಧಾರಾವಾಹಿಗಳು; ಟಿಆರ್‌ಪಿ ರೇಸ್‌ನಲ್ಲಿಲ್ಲ ಭಾಗ್ಯಲಕ್ಷ್ಮೀ!

Bigg Boss- Saregamapa 20 average TRP
ಕಿರುತೆರೆ7 months ago

Kannada Serials TRP: ಏಳನೇ ಸ್ಥಾನಕ್ಕೆ ʻಅಮೃತಧಾರೆʼ ಕುಸಿತ; ಬಿಗ್‌ ಬಾಸ್‌-ಸರಿಗಮಪ ಟಿಆರ್‌ಪಿ ಎಷ್ಟು?

galipata neetu
ಕಿರುತೆರೆ6 months ago

Kanyadana Serial: ಕಿರುತೆರೆಗೆ ಮತ್ತೆ ಎಂಟ್ರಿ ಕೊಟ್ಟ ʻಗಾಳಿಪಟʼ ಖ್ಯಾತಿಯ ʻನೀತುʼ!

Kannada Serials
ಕಿರುತೆರೆ8 months ago

Kannada Serials TRP: ನಾಲ್ಕನೇ ಸ್ಥಾನಕ್ಕೆ ಕುಸಿತ ಕಂಡ ʻಸೀತಾ ರಾಮʼ; ಟಿಆರ್‌ಪಿ ರೇಸ್‌ಗೆ ʻಭಾಗ್ಯಲಕ್ಷ್ಮಿʼ ಬ್ಯಾಕ್‌!

Kannada Serials
ಕಿರುತೆರೆ7 months ago

Kannada Serials TRP: ಟಿಆರ್‌ಪಿಯಲ್ಲಿ ʻಭಾಗ್ಯಲಕ್ಷ್ಮೀʼ ಹವಾ; ʻಪುಟ್ಟಕ್ಕನ ಮಕ್ಕಳುʼ ಧಾರಾವಾಹಿಗೆ ಸಂಕಷ್ಟ!

Bigg Boss' dominates TRP; Sita Rama fell to the sixth position
ಕಿರುತೆರೆ7 months ago

Kannada Serials TRP: ಟಿಆರ್‌ಪಿಯಲ್ಲಿ ʻಬಿಗ್ ಬಾಸ್ʼದೇ ಮೇಲುಗೈ; 6ನೇ ಸ್ಥಾನಕ್ಕೆ ಕುಸಿದ ʻಸೀತಾ ರಾಮʼ

geetha serial Dhanush gowda engagement
ಕಿರುತೆರೆ5 months ago

Dhanush Gowda: ಗೀತಾ ಧಾರಾವಾಹಿ ನಟನ ನಿಶ್ಚಿತಾರ್ಥ; ಭವ್ಯಾಳ ಕಮೆಂಟ್‌ ಬಾಕ್ಸ್‌ ಆಫ್‌!

varun
ಕಿರುತೆರೆ6 months ago

Brindavana Serial: ʼಬೃಂದಾವನʼ ಧಾರಾವಾಹಿಯಲ್ಲಿ ದೊಡ್ಡ ಟ್ವಿಸ್ಟ್‌; ಪ್ರಮುಖ ಪಾತ್ರಧಾರಿಯೇ ಬದಲು

Kannada Serials
ಕಿರುತೆರೆ8 months ago

Kannada Serials TRP: ಟಿಆರ್‌ಪಿಯಲ್ಲಿ ಏರಿಕೆ ಕಂಡ ʻಅಮೃತಧಾರೆʼ; ʻಗಟ್ಟಿಮೇಳʼಕ್ಕೆ ನಾಲ್ಕನೇ ಸ್ಥಾನ!

CM Siddaramaiah says Our government is stable for 5 years BJP will disintegrate
Lok Sabha Election 20242 hours ago

CM Siddaramaiah: ನಮ್ಮ ಸರ್ಕಾರ 5 ವರ್ಷ ಸುಭದ್ರ; ಚುನಾವಣೆ ಬಳಿಕ ಬಿಜೆಪಿ ಛಿದ್ರ ಎಂದ ಸಿಎಂ ಸಿದ್ದರಾಮಯ್ಯ!

I dont want to go to other states for Lok Sabha Election 2024 campaign for Congress says CM Siddaramaiah
Lok Sabha Election 20245 hours ago

CM Siddaramaiah: ಕಾಂಗ್ರೆಸ್‌ ಪರ ಬೇರೆ ರಾಜ್ಯಗಳಿಗೆ ಪ್ರಚಾರಕ್ಕೆ ಹೋಗಲು ನನಗೆ ಇಷ್ಟವಿಲ್ಲ: ಸಿಎಂ ಸಿದ್ದರಾಮಯ್ಯ!

HD Revanna Bail I am not happy that Revanna has been released says HD Kumaraswamy
ರಾಜಕೀಯ6 hours ago

HD Revanna Bail: ರೇವಣ್ಣ ಬಿಡುಗಡೆಯಾಗಿದ್ದಕ್ಕೆ ನಾನಂತೂ ಖುಷಿ ಪಡಲ್ಲ ಎಂದ ಎಚ್‌ಡಿಕೆ!

karnataka Rain Effected
ಬೆಂಗಳೂರು7 hours ago

Karnataka Rain: ಮಿಡ್‌ನೈಟ್‌ ಮಳೆ ಅವಾಂತರ; ಮರಗಳು, ವಿದ್ಯುತ್‌ ಕಂಬಗಳು ಧರೆಗೆ, ಕುಸಿದು ಬಿದ್ದ ಮನೆ

Dina Bhavishya
ಭವಿಷ್ಯ13 hours ago

Dina Bhavishya : ಉದ್ಯೋಗದ ಸ್ಥಳದಲ್ಲಿ ನಿಮ್ಮ ವಿರುದ್ಧ ಪಿತೂರಿ ಮಾಡ್ಬಹುದು ಎಚ್ಚರ!

HD Revanna Bail Revanna will not leave the country condition imposed by the court
ಕ್ರೈಂ24 hours ago

HD Revanna Bail: ರೇವಣ್ಣ ದೇಶ ಬಿಡಂಗಿಲ್ಲ, ಕೆ.ಆರ್‌. ನಗರಕ್ಕೆ ಎಂಟ್ರಿ ಕೊಡಂಗಿಲ್ಲ! ಕೋರ್ಟ್‌ ವಿಧಿಸಿದ ಷರತ್ತು ಏನು?

HD Revanna Bail
ಕ್ರೈಂ24 hours ago

HD Revanna Bail: ಎಚ್‌.ಡಿ ರೇವಣ್ಣಗೆ ಕೊನೆಗೂ ಜಾಮೀನು; ಎಸ್‌ಐಟಿಗೆ ಮುಖಭಂಗ!

Prajwal Revanna Case Revanna bail plea to be heard Judge reprimands SIT cops for their behaviour
ಕ್ರೈಂ1 day ago

Prajwal Revanna Case: ರೇವಣ್ಣ ಜಾಮೀನು ಅರ್ಜಿ ವಿಚಾರಣೆ; ಎಸ್‌ಐಟಿ ಪೊಲೀಸರ ವರ್ತನೆಗೆ ಜಡ್ಜ್‌ ಗರಂ!

Karnataka Weather Forecast
ಮಳೆ1 day ago

Karnataka Weather : ನಾಳೆ ಮುಕ್ಕಾಲು ಕರ್ನಾಟಕದಲ್ಲಿ ಬಿರುಗಾಳಿ ಜತೆಗೆ ವಿಪರೀತ ಮಳೆ

Modi Roadshow Live
ದೇಶ1 day ago

Modi Roadshow Live: ವಾರಾಣಸಿಯಲ್ಲಿ ಮೋದಿ ಭರ್ಜರಿ ರೋಡ್‌ ಶೋ; ಲೈವ್‌ ಇಲ್ಲಿ ವೀಕ್ಷಿಸಿ

ಟ್ರೆಂಡಿಂಗ್‌