Physical Abuse : ಮನೆಯಲ್ಲಿ ಒಬ್ಬಂಟಿಯಾಗಿದ್ದ ಬಾಲಕಿ ಮೇಲೆ ಅತ್ಯಾಚಾರಕ್ಕೆ ಯತ್ನ - Vistara News

ಗದಗ

Physical Abuse : ಮನೆಯಲ್ಲಿ ಒಬ್ಬಂಟಿಯಾಗಿದ್ದ ಬಾಲಕಿ ಮೇಲೆ ಅತ್ಯಾಚಾರಕ್ಕೆ ಯತ್ನ

Physical Abuse : ಮನೆಯಲ್ಲಿ ಬಾಲಕಿ ಒಬ್ಬಂಟಿಯಾಗಿದ್ದನ್ನು ತಿಳಿದ ಕಾಮುಕನೊಬ್ಬ ಅತ್ಯಾಚಾರಕ್ಕೆ ಯತ್ನಿಸಿದ್ದಾನೆ. ಬಾಲಕಿ ಚಿರಾಟ ಕೇಳಿ ಮಹಿಳೆಯೊಬ್ಬರು ಮನೆಯೊಳಗೆ ಬಂದಾಗ ಓಡಿ ಹೋಗಿದ್ದಾನೆ.

VISTARANEWS.COM


on

Attempt to rape girl in Gadag
ಸಾಂದರ್ಭಿಕ ಚಿತ್ರ
ಮಹತ್ವದ, ಕುತೂಹಲಕರ ಸುದ್ದಿಗಾಗಿ ಫಾಲೊ ಮಾಡಿ
Koo

ಗದಗ: ಅಪ್ರಾಪ್ತೆ ಮೇಲೆ ಅತ್ಯಾಚಾರಕ್ಕೆ (Physical Abuse) ಯತ್ನಿಸಿರುವ ಘಟನೆ ಗದಗ ಜಿಲ್ಲೆಯ ಮುಂಡರಗಿ ಪೊಲೀಸ್ ಠಾಣಾ ವ್ಯಾಪ್ತಿಯಲ್ಲಿ ನಡೆದಿದೆ. 16 ವರ್ಷದ ಬಾಲಕಿ ಮೇಲೆ ವಿಜಯಕುಮಾರ್ ಎಂಬಾತ ಅತ್ಯಾಚಾರಕ್ಕೆ ಯತ್ನಿಸಿದ್ದಾನೆ.

ಮನೆಯಲ್ಲಿ ಬಾಲಕಿ ಒಬ್ಬಳೇ ಇರುವುದನ್ನು ನೋಡಿ ಒಳ ನುಗ್ಗಿದ ವಿಜಯಕುಮಾರ್ ಅತ್ಯಾಚಾರಕ್ಕೆ ಮುಂದಾಗಿದ್ದ. ಅತ್ಯಾಚಾರಕ್ಕೆ ಯತ್ನಿಸುವ ವೇಳೆ ಬಾಲಕಿ ಚಿರಾಡಿದ್ದಾಳೆ. ಬಾಲಕಿಯ ಚಿರಾಟ ಕೇಳಿ ಸ್ಥಳೀಯ ಮಹಿಳೆಯೊಬ್ಬರು ಮನೆಯೊಳಗೆ ಬಂದಾಗ, ಕಾಮುಕ ವಿಜಯಕುಮಾರ್ ಓಡಿ ಹೋಗಿದ್ದಾನೆ.

ಸಂತ್ರಸ್ತೆಯ ಪೋಷಕರು ಮುಂಡರಗಿ ಪೊಲೀಸ್ ಠಾಣೆಯಲ್ಲಿ ದೂರು ನೀಡಿದ್ದಾರೆ. ಪ್ರಕರಣ ದಾಖಲಿಸಿಕೊಂಡಿರುವ ಪೊಲೀಸರು ಆರೋಪಿ ವಿಜಯ್ ಕುಮಾರ್‌ನನ್ನು ವಶಕ್ಕೆ ಪಡೆದುಕೊಂಡಿದ್ದಾರೆ. ಪ್ರಕರಣ ಸಂಬಂಧ ತನಿಖೆಯನ್ನು ನಡೆಸುತ್ತಿದ್ದಾರೆ.

ಇದನ್ನೂ ಓದಿ: ಬೆಡ್‌ರೂಂ ಕಿಟಕಿ ಹಾಕದೆ ರತಿಕೇಳಿ, ಪಕ್ಕದ ಮನೆ ಮಹಿಳೆಗೆ ಕಿರಿಕ್!‌ ಬೆಂಗಳೂರಿನಲ್ಲಿ ವಿಚಿತ್ರ ದೂರು

ಲೈಂಗಿಕ ಕಿರುಕುಳ ಕೊಟ್ಟ ಶಿಕ್ಷಕ; ತಿರುಗಿ ಬಿದ್ದ ವಿದ್ಯಾರ್ಥಿನಿಯರು

ಮಂಗಳೂರು: ಶಾಲಾ ಶಿಕ್ಷಕನಿಂದ ವಿದ್ಯಾರ್ಥಿನಿಯರಿಗೆ ಲೈಂಗಿಕ ಕಿರುಕುಳ (POSCO Case) ನೀಡುತ್ತಿರುವ ಆರೋಪ (Physical Abuse) ಕೇಳಿ ಬಂದಿದೆ. ದಕ್ಷಿಣ ಕನ್ನಡದ ಮೂಡಬಿದ್ರೆ ಠಾಣಾ ವ್ಯಾಪ್ತಿಯಲ್ಲಿರುವ ಶಾಲೆಯಲ್ಲಿ ಘಟನೆ ನಡೆದಿದೆ. ಬೆಳ್ತಂಗಡಿ ಮೂಲದ ಶಿಕ್ಷಕ ಲೈಂಗಿಕ ಕಿರುಕುಳ ನೀಡಿರುವ ಬಗ್ಗೆ ವಿದ್ಯಾರ್ಥಿನಿಯರು ದೂರು ನೀಡಿದ್ದಾರೆ.

ವಿದ್ಯಾರ್ಥಿನಿಯರು ದೂರಿನ ಮೇರೆಗೆ ಶಾಲಾ ಆಡಳಿತ ಮಂಡಳಿ ಮತ್ತು ಶಿಕ್ಷಕ ರಕ್ಷಕ ಸಂಘದಿಂದ ಮೂಡಬಿದರೆ ಪೊಲೀಸ್ ಠಾಣೆಯಲ್ಲಿ ಪೋಕ್ಸೋ ಕಾಯಿದೆಯಡಿ ಪ್ರಕರಣ ದಾಖಲಾಗಿದೆ.

ಶಾಲೆಗೆ ಚೈಲ್ಡ್ ಲೈನ್ ಅಧಿಕಾರಿಗಳು, ಪಂಚಾಯತ್ ಸದಸ್ಯರು ಭೇಟಿ ನೀಡಿ ಪರಿಶೀಲನೆ ನಡೆಸಿದ್ದಾರೆ. ಮಂಗಳೂರು ಮಹಿಳಾ ಠಾಣೆಯ ಪೊಲೀಸರು ಭೇಟಿ ನೀಡಿ ವಿದ್ಯಾರ್ಥಿಗಳಿಂದ ಮಾಹಿತಿ‌ ಸಂಗ್ರಹಿಸಿದ್ದಾರೆ. ಶಿಕ್ಷಕನನ್ನು ಬಂಧಿಸುವಂತೆ ಪೋಷಕರಿಂದಲ್ಲೂ ಒತ್ತಾಯ ಕೇಳಿ ಬಂದಿದೆ.

ಯುವತಿಯನ್ನು ಹಿಂಬಾಲಿಸಿ ಹಿಂದಿನಿಂದ ಬಂದು ತಬ್ಬಿಕೊಂಡ ಕಾಮುಕ

ಬೆಂಗಳೂರು: ವಿಕೃತ ಮನಸ್ಥಿತಿಯ ವ್ಯಕ್ತಿಗಳು ಹೆಚ್ಚಾಗುತ್ತಿದ್ದಾರೆ. ಯಾರ ಭಯವು ಇಲ್ಲದೇ ಸಾರ್ವಜನಿಕವಾಗಿಯೇ ಅಸಭ್ಯವಾಗಿ ನಡೆದುಕೊಳ್ಳುತ್ತಿದ್ದಾರೆ. ಮಹಿಳೆಯರು ಇದರಿಂದ ಮುಜುಗರಕ್ಕೀಡಾಗುತ್ತಿರುವುದು ಮಾತ್ರವಲ್ಲ ಅವರಿಗೆ ಭದ್ರತೆಯೇ ಇಲ್ಲದಂತಾಗಿದೆ. ಯುವತಿಯನ್ನು ಹಿಂಬಾಲಿಸಿಕೊಂಡು ಬಂದ ಕಾಮುಕನೊಬ್ಬ, ಹಿಂದಿನಿಂದ ತಬ್ಬಿಕೊಂಡು ಅಸಭ್ಯವಾಗಿ (Physical Abuse) ವರ್ತಿಸಿದ್ದಾನೆ.

ಶೃತಿ ಸಿಂಗ್ ಎಂಬಾಕೆ ತಮಗಾದ ಅನುಭವವನ್ನು ಸೋಶಿಯಲ್‌ ಮೀಡಿಯಾದಲ್ಲಿ ಹಂಚಿಕೊಂಡಿದ್ದಾರೆ. ಶೃತಿ ಅವರು ತಮ್ಮ ಸ್ನೇಹಿತನ ಜತೆ ಡ್ರಾಪ್ ಪಡೆದು ಮನೆ ಬಳಿ ಬರುತ್ತಿದ್ದರು. ಆಕೆ ಒಬ್ಬಂಟಿಯಾಗಿದ್ದನ್ನು ಗಮನಿಸಿದ ಕಾಮುಕ ಹಿಂಬಾಲಿಕೊಂಡು ಬಂದಿದ್ದ. ನಂತರ ಆಕೆ ನಡೆದುಕೊಂಡು ಹೋಗುವ ಸಂದರ್ಭದಲ್ಲಿ ಬೈಕ್‌ನಿಂದ ಇಳಿದು, ಓಡಿ ಬಂದವನೇ ಹಿಂಭಾಗದಿಂದ ತಬ್ಬಿ ಅಸಭ್ಯವಾಗಿ ವರ್ತಿಸಿದ್ದಾನೆ.

ಇದರಿಂದ ಆತಂಕಗೊಂಡ ಯುವತಿ ಗಾಬರಿಯಾಗಿ ಕಿರುಚಾಡಿದ್ದಾಳೆ. ಕೂಡಲೇ ಜನರನ್ನು ಸೇರಿದ್ದಾಳೆ. ಇದನ್ನು ವಿರೋಧಿಸಿದ ಯುವತಿ ಅಲ್ಲಿದ್ದ ಸ್ಥಳೀಯರ ಸಹಕಾರದಿಂದ ಆತನನ್ನು ಪೊಲೀಸರಿಗೆ ಒಪ್ಪಿಸಿದ್ದಾಳೆ. ಅಷ್ಟಲ್ಲದೆ ಆತನ ವಿಡಿಯೋವನ್ನು ಸೋಶಿಯಲ್‌ ಮೀಡಿಯಾದಲ್ಲಿ ಪೋಸ್ಟ್ ಮಾಡಿದ್ದಾಳೆ. ಮಹಿಳೆಯರಿಗೆ ನಗರದಲ್ಲಿ ಸುರಕ್ಷತೆ ಎಲ್ಲಿದೆ ಎಂದು ಪ್ರಶ್ನೆ ಮಾಡಿದ್ದಾರೆ.

ಈ ಘಟನೆ ಬಗ್ಗೆ ನಾನು ಯಾವುದೇ ರೀತಿಯ ದೂರು ಕೊಡುವುದಿಲ್ಲ. ಒಂದು ವೇಳೆ ದೂರು ಕೊಟ್ಟರೆ ಕೋರ್ಟ್‌, ಕಛೇರಿ ಎಂದು ಅಲೆಯಬೇಕಾಗುತ್ತದೆ. ಇದರಿಂದ ಇನ್ನಷ್ಟು ಮಾನಸಿಕವಾಗಿ ಹಿಂಸೆಯಾಗುತ್ತೆ ಎಂದು ಬರೆದುಕೊಂಡಿದ್ದಾಳೆ. ಇಂತಹ ಬೀದಿ ಕಾಮಣ್ಣರನ್ನು ಪೊಲೀಸರು ನಿರ್ನಾಮ ಮಾಡಬೇಕು. ಹೆಣ್ಮಕ್ಕಳು ನೆಮ್ಮದಿಯಾಗಿ ನಿರ್ಭಿತಿಯಾಗಿ ಓಡಾಡುವಂತಾಗಬೇಕೆಂದು ಆಗ್ರಹಿಸಿದ್ದಾರೆ.

ಈ ಸಂಗತಿಯ ಕುರಿತು ನಿಮ್ಮ ಅನಿಸಿಕೆ ಏನು? ಕಾಮೆಂಟ್ ಮೂಲಕ ತಿಳಿಸಿ

ಕ್ಷಣ ಕ್ಷಣದ ಮಾಹಿತಿಗಾಗಿ Vistara News FaceBook ಪೇಜ್ ಫಾಲೋ ಮಾಡಿ
ಮಹತ್ವದ ಮಾಹಿತಿಗಾಗಿ ವಿಸ್ತಾರ ನ್ಯೂಸ್ ಆ್ಯಪ್ ಉಚಿತವಾಗಿ ಡೌನ್ ಲೋಡ್ ಮಾಡಿಕೊಳ್ಳಿ: Andriod App | IOS App
Continue Reading
Click to comment

Leave a Reply

Your email address will not be published. Required fields are marked *

ಮಳೆ

Karnataka Rain : ಮಳೆ ಅವಘಡಕ್ಕೆ ಜನರು ತತ್ತರ; ಧರೆಗುರುಳಿದ ಮರಗಳು, ಕುಸಿದು ಬಿದ್ದ ಮನೆಗಳು

Rain News : ರಾಜ್ಯದ ಹಲವೆಡೆ ಮಳೆಯು (Karnataka Rain) ಅಬ್ಬರಿಸುತ್ತಿದೆ. ಮೈಸೂರಿನ ಹುಣಸೂರಿನಲ್ಲಿ ಜೋರು ಮಳೆಗೆ ಮನೆ ಕುಸಿದು ಬಿದ್ದರೆ, ಬೆಳಗಾವಿಯಲ್ಲಿ ಗಾಳಿ ಮಳೆಗೆ ಶಾಲೆಯ ಶೆಡ್‌
(Karnataka Weather Forecast) ಹಾರಿ ಹೋಗಿದೆ. ಯಾದಗಿರಿ, ಧಾರವಾಡದಲ್ಲಿ ಮರಗಳು ಧರೆಗುರುಳಿದ್ದವು.

VISTARANEWS.COM


on

By

Karnataka rain
Koo

ಮೈಸೂರು: ಮೈಸೂರಿನ ಹುಣಸೂರು ಭಾಗದಲ್ಲಿ ವರುಣನ (Rain News) ಅಬ್ಬರ ಜೋರಾಗಿದೆ. ಕಳೆದ ನಾಲ್ಕೈದು ದಿನಗಳಿಂದ ಸುರಿಯುತ್ತಿರುವ ಮಳೆಗೆ (Karnataka Rain) ತಾಲೂಕಿನ ಹಲವು ಗ್ರಾಮಗಳಲ್ಲಿ ಅಪಾರ ಪ್ರಮಾಣದಲ್ಲಿ ಹಾನಿಯಾಗಿದೆ. ಕಾಳೇನಹಳ್ಳಿಯಲ್ಲಿ ಶ್ರೀನಿವಾಸ್ ಎಂಬುವರಿಗೆ ಸೇರಿದ ಮನೆಯು ಕುಸಿದು ಬಿದ್ದಿದೆ. ಅದೃಷ್ಟವಶಾತ್ ಯಾವುದೇ ಅಪಾಯ ಸಂಭವಿಸಿಲ್ಲ. ಜೋರಾಗಿ ಸುರಿದ ಮಳೆಗೆ ಮನೆಯಲ್ಲಿದ್ದ ವಸ್ತುಗಳೆಲ್ಲ ನಾಶವಾಗಿದೆ. ವಾಸಕ್ಕೆ ಮನೆಯಿಲ್ಲದ ಪರಿಸ್ಥಿತಿ ನಿರ್ಮಾಣವಾಗಿದ್ದು, ಕುಟುಂಬಸ್ಥರು ಪರಿಹಾರಕ್ಕಾಗಿ ಮನವಿ ಮಾಡಿದ್ದಾರೆ.

ಇತ್ತ ಹನಗೋಡಿನಲ್ಲಿ ಭಾರಿ ಮಳೆಗೆ ಜನರು ತತ್ತರಿಸಿದ್ದರು. ಹುಣಸೂರು ತಾಲೂಕಿನ ಹನಗೋಡಿ ಗ್ರಾಮದಲ್ಲಿ ವಾರದಿಂದ ಸುರಿಯುತ್ತಿರುವ ಮಳೆಗೆ ಮನೆ ಅಂಗಡಿಗಳಿಗೆ ನೀರು ನುಗ್ಗಿ ಸಂಪೂರ್ಣ ಜಲಾವೃತಗೊಂಡಿತ್ತು. ಬಸ್ ನಿಲ್ದಾಣ ಕೆರೆಯಂತಾಗಿತ್ತು. ಚರಂಡಿಗಳ ವ್ಯವಸ್ಥೆ ಸರಿಯಿಲ್ಲದೆ ನೀರು ಹೋಗದೆ ನಿಂತಲ್ಲೇ ನಿಂತು ಜನರಿಗೆ ತೊಂದರೆಯಾಗಿತ್ತು.

ಇದನ್ನೂ ಓದಿ: Accident Case : ಇಳಿಜಾರಿನಲ್ಲಿ ತಪ್ಪಿದ ಕಂಟ್ರೋಲ್‌; ಟ್ರ್ಯಾಕ್ಟರ್‌ ಪಲ್ಟಿಯಾಗಿ ಯುವಕ ಮೃತ್ಯು

ಗಾಳಿ ಮಳೆಗೆ ಹಾರಿ ಹೋದ ಶಾಲೆಯ ಶೆಡ್‌

ಬೆಳಗಾವಿ ಜಿಲ್ಲೆಯ ಕಾಗವಾಡ ತಾಲೂಕಿನ ಜುಗೂಳ ಗ್ರಾಮದ ಸರ್ಕಾರಿ ಶಾಲೆಯಲ್ಲಿ ಜೋರು ಗಾಳಿ ಮಳೆಗೆ ಶೆಡ್ ಹಾರಿ ಹೋಗಿತ್ತು. ಶಾಲೆಗೆ ರಜೆ ಇದ್ದಿದ್ದರಿಂದ ಭಾರಿ ಅನಾಹುತ ತಪ್ಪಿತ್ತು. ಶಾಲೆಯ ಶೆಡ್ ಹಾರಿ ಅಕ್ಕಪಕ್ಕದ ಮನೆಗಳು ಹಾಗೂ ವಿದ್ಯುತ್ ತಂತಿಗಳು ಮೇಲೆ ಬಿದ್ದು ಹಾನಿಯಾಗಿತ್ತು.

ಯಾದಗಿರಿಯಲ್ಲಿ ಧರೆಗುರುಳಿದ ಮರಗಳು

ಯಾದಗಿರಿಯಲ್ಲಿ ಬಿರುಗಾಳಿ ಸಹಿತ ಮಳೆಗೆ ಬೃಹತ್ ಮರಗಳು ಧರೆಗುರುಳಿದ್ದವು. ಸತತ ಒಂದು ಗಂಟೆಗೂ ಹೆಚ್ಚು ಸಮಯ ಸುರಿದ ಮಳೆಗೆ ಮರಗಳ ಮೇಲ್ಭಾಗದ ರಂಬೆ, ಕೊಂಬೆಗಳು ಸಂಪೂರ್ಣ ಗಾಳಿಗೆ ಮುರಿದು ಬೋಳಾಗಿದ್ದವು. ಕೆಲವೆಡೆ ಮನೆ ಮುಂದೆ ಇದ್ದ ಮರಗಳು ನೆಲಕ್ಕುರುಳಿದ್ದವು. ಭಾರಿ ಮಳೆಗೆ ಸುಭಾಷ್ ವೃತ್ತದ ಸಮೀಪದ ಪಿಡ್ಲೂಡಿ ಕಚೇರಿ ಆವರಣದೊಳಗೆ ಮಳೆ ನೀರು ನುಗ್ಗಿತ್ತು. ಯಾದಗಿರಿ ಶಾಸಕ ಚನ್ನಾರೆಡ್ಡಿ ಪಾಟೀಲ ತುನ್ನೂರು ಅವರ ಜನಸಂಪರ್ಕದ ಕಚೇರಿ ಆವರಣದಲ್ಲಿ ಮರಗಳು ಧರೆಗುರುಳಿದ್ದವು.

ಯಾದಗಿರಿಯಲ್ಲಿ ಬಿರುಗಾಳಿ ಸಹಿತ ಭಾರೀ ಮಳೆಗೆ ಆರು ಜನರ ಕುಟುಂಬವೊಂದು ಪ್ರಾಣಾಪಾಯದಿಂದ ಜಸ್ಟ್ ಮಿಸ್ ಆಗಿದೆ. ಯಾದಗಿರಿಯ ಮಾತಾಮಣಿಕೇಶ್ವರಿ ನಗರದಲ್ಲಿ ಭಾರೀ ಮಳೆ ಗಾಳಿಗೆ ಮನೆಗೆ ಹಾಕಿದ ಟಿನ್ ಶೆಡ್ ಹಾರಿಹೋಗಿದೆ. ಮಳೆ ಗಾಳಿ ಜೋರಾಗುತ್ತಿದ್ದಂತೆ ಇಡೀ ಕುಟುಂಬ ಮನೆಯಿಂದ ಹೊರಬಂದು ಬಚಾವ್ ಆಗಿದ್ದಾರೆ. ಮನೆಯಿಂದ ಹೊರ ಬಂದ ಕೆಲವೇ ಕ್ಷಣದಲ್ಲಿ ಟಿನ್ ಶೆಡ್ ಕುಸಿದು ಬಿದ್ದಿದೆ. ಇತ್ತ ದಿನಸಿ ಸಾಮಾನು ಸೇರಿದಂತೆ ಎಲ್ಲ ವಸ್ತುಗಳು ಹಾಳಾಗಿವೆ.

ಧಾರಾವಾಡದಲ್ಲಿ ಧಾರಾಕಾರ ಮಳೆಗೆ ರಸ್ತೆ ಮೇಲೆ ನಿಂತ ನೀರು

ಧಾರವಾಡದಲ್ಲಿ ಗುರುವಾರದಂದು ಅರ್ಧ ಗಂಟೆಗೂ ಹೆಚ್ಚು ಸಮಯ ಮಳೆಯಾಗಿತ್ತು. ಎರಡು ದಿನದಿಂದ ಬ್ರೇಕ್‌ ಕೊಟ್ಟಿದ್ದ ಮಳೆಯು ಗುರುವಾರ ದಿಢೀರ್‌ ಅಪ್ಪಳಿಸಿತ್ತು. ಪರಿಣಾಮ ವಾಹನ ಸಂಚಾರ ಅಸ್ತವ್ಯಸ್ತವಾಗಿತ್ತು. ಧಾರವಾಡ ಹೊರವಲಯದ ಕೆಎಂಎಫ್ ಬಳಿ ಧಾರಾಕಾರ ಮಳೆಗೆ ರಸ್ತೆಯಲ್ಲೇ ನೀರು ನಿಂತಿತ್ತು. ಬಿಆರ್‌ಟಿಎಸ್ ಕಾರಿಡಾರ್‌ನಿಂದ ಹರಿದು ಹೋಗದೇ ಇರುವುದೇ ಕಾರಣ ಎಂದು ಸ್ಥಳೀಯರು ಆಕ್ರೋಶಿಸಿದರು.

ಚಿಕ್ಕಮಗಳೂರಿನ ಕೊಪ್ಪ ತಾಲೂಕಿನ ಬಸರೀಕಟ್ಟೆ, ತರೀಕೆರೆಯಲ್ಲೂ ಭಾರೀ ಮಳೆಯಾಗಿದ್ದು ರಸ್ತೆಯಲ್ಲಿ ಎರಡು ಅಡಿ ನೀರು ನಿಂತಿತ್ತು. ತರೀಕೆರೆ ಪಟ್ಟಣದ ಗಣಪತಿ ಪೆಂಡಾಲ್ ಮುಂಭಾಗ ಕಾರು, ಬೈಕ್‌ಗಳು ಅರ್ಧದಷ್ಟು ಮುಳುಗಿತ್ತು. ಎನ್ಆರ್‌ ಪುರ ತಾಲೂಕಿನ ಬಾಳೆಹೊನ್ನೂರಿನಲ್ಲೂ ಮಳೆಯಾಗಿದೆ.

ಈ ಸಂಗತಿಯ ಕುರಿತು ನಿಮ್ಮ ಅನಿಸಿಕೆ ಏನು? ಕಾಮೆಂಟ್ ಮೂಲಕ ತಿಳಿಸಿ

Continue Reading

ಗದಗ

Bus seized: ಆಂಧ್ರ ಸಿಎಂ ಕ್ಷೇತ್ರದ ಪ್ರವಾಸಿಗರು ಗದಗಿನಲ್ಲಿ ಲಾಕ್‌; ಇಡೀ ರಾತ್ರಿ ಆರ್‌ಟಿಒ ಕಚೇರಿಯಲ್ಲಿ ಕಳೆದ 49 ಮಂದಿ!

Bus Siege: ಆಂಧ್ರಪ್ರದೇಶದ ಕಡಪಾ ಜಿಲ್ಲೆಯ‌ ಪುಲಿವೆಂದುಲಾ ಪಟ್ಟಣದ ನಿವಾಸಿಗಳು ಇವರಾಗಿದ್ದು, ಹೈದರಾಬಾದ್, ಕರ್ನಾಟಕ, ಗೋವಾ, ತಮಿಳುನಾಡು ರಾಜ್ಯ ಪ್ರವಾಸ ಮಾಡಲು ಮುಂದಾಗಿದ್ದರು. ಹೈದರಾಬಾದ್‌ನಿಂದ ರಾಯಚೂರು ಮಾರ್ಗವಾಗಿ ಗದಗ ನಗರಕ್ಕೆ ಈ ಬಸ್‌ ಎಂಟ್ರಿಯಾಗಿತ್ತು. ಹೆದ್ದಾರಿಯಲ್ಲಿ ಬಸ್‌ ನಿಲ್ಲಿಸಿದ ಆರ್‌ಟಿಒ ಪೊಲೀಸರು ದಾಖಲೆಗಳನ್ನು ಪರಿಶೀಲನೆ ಮಾಡಿದ್ದಾರೆ. ಆಗ ಚಾರ್ಸಿ, ಎಂಜಿನ್ ನಂಬರ್ ಅನ್ನೇ ತಿರುಚಿರುವ ಸಂಗತಿ ಗೊತ್ತಾಗಿದೆ. ಇದರ ಜತೆಗೆ ಉಳಿದ ದಾಖಲೆಗಳೂ ಸರಿ ಇರಲಿಲ್ಲ. ಹೀಗಾಗಿ ಬಸ್‌ ಅನ್ನು ಸೀಝ್‌ ಮಾಡಲಾಗಿದೆ.

VISTARANEWS.COM


on

Bus Siege Andhra Pradesh bus seized in Gadag and 49 tourists in trouble
Koo

ಗದಗ: ಇದೊಂದು ತಮ್ಮದಲ್ಲದ ತಪ್ಪಿಗೆ ಪರದಾಟ ನಡೆಸುತ್ತಿರುವ ಅಪರೂಪದ ಪ್ರಕರಣವಾಗಿದೆ. ಗದಗಿನಲ್ಲಿ ಆಂಧ್ರಪ್ರದೇಶ ಪ್ರವಾಸಿಗರು (Andhra Pradesh tourists) ಲಾಕ್‌ ಆಗಿದ್ದಾರೆ. ಒಂದಿಡೀ ರಾತ್ರಿ ಆರ್‌ಟಿಒ ಕಚೇರಿಯಲ್ಲಿಯೇ ಕಳೆಯುವಂತಾಗಿದೆ. ಇಷ್ಟಾದರೂ ಅವರಿಗೆ ಅಲ್ಲಿಂದ ಮುಕ್ತಿ ಸಿಕ್ಕಿಲ್ಲ. ಆಂಧ್ರಪ್ರದೇಶದ ಸಿಎಂ ಜಗನ್‌ ಮೋಹನ್‌ ರೆಡ್ಡಿ (Andhra Pradesh CM Jagan Mohan Reddy) ಅವರ ತವರು ಕ್ಷೇತ್ರದ ಮಂದಿ ಪ್ರವಾಸಕ್ಕೆಂದು ಬಂದಿದ್ದಾಗ ಗದಗ ಆರ್‌ಟಿಒ ಪೊಲೀಸರು ಬಸ್‌ ಅನ್ನು ತಡೆದಿದ್ದಾರೆ. ಈ ವೇಳೆ ಬಸ್‌ಗೆ ಸರಿಯಾದ ದಾಖಲೆಗಳು ಇಲ್ಲದೆ ಇದ್ದಿದ್ದರಿಂದ ಸೀಝ್‌ (Bus seized) ಮಾಡಿ ಆರ್‌ಟಿಒ ಕಚೇರಿಗೆ ತಂದಿದ್ದಾರೆ. ಅನಿವಾರ್ಯವಾಗಿ ಪ್ರವಾಸಿಗರೂ ಅಲ್ಲಿಗೆ ಬಂದು ಕೂರುವಂತಾಗಿದೆ.

ಈಗ ಗದಗ ಆರ್‌ಟಿಒ ಕಚೇರಿಯಲ್ಲಿ ಆಂಧ್ರ ಪ್ರದೇಶ ಪುಲುವೆಂದುಲಾ ವಿಧಾನಸಭಾ ಕ್ಷೇತ್ರದ 49 ಮಂದಿ ಗೋಳಾಡುವಂತಾಗಿದೆ. ಮಕ್ಕಳು, ಮಹಿಳೆಯರು ಸೇರಿದಂತೆ 49 ಪ್ರವಾಸಿಗರು ಆಂಧ್ರ ಪ್ರದೇಶದಿಂದ 10 ದಿನಗಳ ಕಾಲ ಪ್ರವಾಸವನ್ನು ಕೈಗೊಂಡಿದ್ದರು.

ಆಂಧ್ರಪ್ರದೇಶದ ಕಡಪಾ ಜಿಲ್ಲೆಯ‌ ಪುಲಿವೆಂದುಲಾ ಪಟ್ಟಣದ ನಿವಾಸಿಗಳು ಇವರಾಗಿದ್ದು, ಹೈದರಾಬಾದ್, ಕರ್ನಾಟಕ, ಗೋವಾ, ತಮಿಳುನಾಡು ರಾಜ್ಯ ಪ್ರವಾಸ ಮಾಡಲು ಮುಂದಾಗಿದ್ದರು. ಹೈದರಾಬಾದ್‌ನಿಂದ ರಾಯಚೂರು ಮಾರ್ಗವಾಗಿ ಗದಗ ನಗರಕ್ಕೆ ಈ ಬಸ್‌ ಎಂಟ್ರಿಯಾಗಿತ್ತು. ಹೆದ್ದಾರಿಯಲ್ಲಿ ಬಸ್‌ ನಿಲ್ಲಿಸಿದ ಆರ್‌ಟಿಒ ಪೊಲೀಸರು ದಾಖಲೆಗಳನ್ನು ಪರಿಶೀಲನೆ ಮಾಡಿದ್ದಾರೆ.

Bus Siege Andhra Pradesh bus seized in Gadag and 49 tourists in trouble
ರಸ್ತೆ ಪಕ್ಕವೇ ಅಡುಗೆ ಮಾಡಿ ಊಟ ಮಾಡುತ್ತಿರುವ ಆಂಧ್ರಪ್ರದೇಶದ ಪ್ರವಾಸಿಗರು.

ದಾಖಲೆಗಳೇ ಸರಿ ಇಲ್ಲ!

AP03 TE8520 ನಂಬರ್ ಪ್ಲೇಟ್‌ವುಳ್ಳ ಬಸ್ ಇದಾಗಿದ್ದು, ದಾಖಲೆಗಳನ್ನು ಪರಿಶೀಲಿಸಿದಾಗ ಚಾರ್ಸಿ, ಎಂಜಿನ್ ನಂಬರ್ ಅನ್ನೇ ತಿರುಚಿರುವ ಸಂಗತಿ ಗೊತ್ತಾಗಿದೆ. ಇದರ ಜತೆಗೆ ಉಳಿದ ದಾಖಲೆಗಳೂ ಸರಿ ಇರಲಿಲ್ಲ. ಈ ಬಗ್ಗೆ ಬಸ್‌ ಚಾಲಕ, ನಿರ್ವಾಹಕರನ್ನು ಕೇಳಿದರೆ ಸರಿಯಾಗಿ ಉತ್ತರ ನೀಡಲಿಲ್ಲ. ಹೀಗಾಗಿ ಹೆದ್ದಾರಿಯಲ್ಲಿಯೇ ಬಸ್‌ ಅನ್ನು ಸೀಝ್‌ ಮಾಡಿದ ಅಧಿಕಾರಿಗಳು, ಆ ಬಸ್‌ ಅನ್ನು ಆರ್‌ಟಿಒ ಕಚೇರಿಗೆ ತಂದರು.

ಇದನ್ನೂ ಓದಿ: Prajwal Revanna Case: ನಿಖಿಲ್ ಎಲ್ಲಿದ್ದೀಯಪ್ಪಾ ಎಂದಿದ್ದಾಯ್ತು, ಈಗ ಪ್ರಜ್ವಲ್ ಎಲ್ಲಿದ್ದೀಯಪ್ಪಾ ಎನ್ನುತ್ತಿದ್ದಾರೆ ಬ್ರದರ್ ಸ್ವಾಮಿಗಳು!

ಪ್ರವಾಸಿಗರ ಪರದಾಟ

ಈ ಎಲ್ಲ ಬೆಳವಣಿಗೆ ನಡುವೆ ಅಕ್ಷರಶಃ ನಲುಗಿರುವುದು ಆಂಧ್ರ ಪ್ರದೇಶದ ಪ್ರವಾಸಿಗರು. ಅವರು ಖುಷಿ ಖುಷಿಯಿಂದ ಪ್ರವಾಸಕ್ಕೆ ಹೊರಟಿದ್ದರು. ಆದರೆ, ಬಸ್‌ ದಾಖಲೆ ಸರಿ ಇಲ್ಲದಿರುವ ಬಗ್ಗೆ ಮಾಹಿತಿ ಇಲ್ಲದೇ ಇದ್ದರಿಂದ ಈಗ ಫಜೀತಿಗೆ ಸಿಲುಕಿದ್ದಾರೆ. ಬಸ್‌ಗೆ ಬಾಡಿಗೆ ಕೊಟ್ಟು ಬುಕ್‌ ಮಾಡಲಾಗಿದೆ. ಈಗ ಬೇರೆ ರಾಜ್ಯದಲ್ಲಿ ಬಸ್‌ ಸೀಜ್‌ ಆದರೆ ತಾವು ಏನು ಮಾಡುವುದು ಎಂಬ ಯೋಚನೆ ಎದುರಾಯಿತು. ಹೀಗಾಗಿ ಮಂಗಳವಾರ ಮಧ್ಯಾಹ್ನವೇ ಬಸ್‌ ಅನ್ನು ಸೀಜ್‌ ಮಾಡಲಾಗಿದ್ದರೂ ಬಸ್‌ ಜತೆಗೆ ಪ್ರಯಾಣಿಕರೂ ಆರ್‌ಟಿಒ ಕಚೇರಿಗೆ ಬಂದು ಕುಳಿತಿದ್ದರು. ನಮಗೆ ಬಸ್‌ ಅನ್ನು ಬಿಟ್ಟುಕೊಡಿ, ಇಲ್ಲವೇ ಬೇರೆ ಬಸ್‌ ಅನ್ನು ವ್ಯವಸ್ಥೆ ಮಾಡಿ ಎಂದು ಆರ್‌ಟಿಒ ಅಧಿಕಾರಿಗಳಿಗೆ ಮನವಿ ಮಾಡುತ್ತಿದ್ದಾರೆ. ಆದರೆ, ಆರ್‌ಟಿಒ ಅಧಿಕಾರಿಗಳು ಇದ್ಯಾವುದಕ್ಕೂ ಜಗ್ಗುತ್ತಿಲ್ಲ. ದಾಖಲೆಗಳನ್ನು ತಿರುಚುವುದು ಕಾನೂನು ಪ್ರಕಾರ ಅಪರಾಧವಾಗಿದೆ. ಹೀಗಾಗಿ ಈ ಬಸ್‌ ಅನ್ನು ಸೀಝ್‌ ಮಾಡಲಾಗಿದೆ ಎಂದು ಹೇಳುತ್ತಿದ್ದಾರೆ.

Continue Reading

ಮಳೆ

Karnataka Weather : ಮುಂದುವರಿಯಲಿದೆ ವರುಣಾರ್ಭಟ; ಬೆಂಗಳೂರಲ್ಲೂ ಭಾರಿ ಮಳೆ ನಿರೀಕ್ಷೆ!

Rain News : ರಾಜ್ಯಾದ್ಯಂತ ಮಳೆ ಮುಂದುವರಿದಿದ್ದು, 8 ಜಿಲ್ಲೆಗಳಲ್ಲಿ ಭಾರಿ ಮಳೆ ಜತೆಗೆ ಬಿರುಗಾಳಿ ಬೀಸಲಿದೆ ಎಂದು ಹವಾಮಾನ ಇಲಾಖೆ ಮುನ್ಸೂಚನೆಯನ್ನು (Karnataka Weather Forecast) ನೀಡಿದೆ. ಈ ಹಿನ್ನೆಲೆಯಲ್ಲಿ ಆರೆಂಜ್‌ ಹಾಗೂ ಯೆಲ್ಲೋ ಅಲರ್ಟ್‌ ನೀಡಲಾಗಿದೆ.

VISTARANEWS.COM


on

By

Karnataka Weather Forecast
Koo

ಬೆಂಗಳೂರು: ಮೇ 22ರಂದು ದಕ್ಷಿಣ ಒಳನಾಡು, ಮಲೆನಾಡು ಮತ್ತು ಕರಾವಳಿ ಜಿಲ್ಲೆಗಳಲ್ಲಿ ಚದುರಿದಂತೆ ಸಾಧಾರಣ ಮಳೆಯಾಗಲಿದ್ದು, ಉತ್ತರ ಒಳನಾಡು ಭಾಗದಲ್ಲಿ ವ್ಯಾಪಕವಾಗಿ ಹಗುರದಿಂದ ಮಧ್ಯಮ (rain News) ಮಳೆಯಾಗಲಿದೆ. ರಾಜ್ಯದ ಪ್ರತ್ಯೇಕ ಸ್ಥಳಗಳಲ್ಲಿ ಗುಡುಗು ಮಿಂಚಿನ ಜತೆಗೆ ಗಾಳಿ ವೇಗವು ಗಂಟೆಗೆ 30-40 ಕಿ.ಮೀ ಬೀಸುವ (Karnataka Weather Forecast) ಸಾಧ್ಯತೆಯಿದೆ.

ದಕ್ಷಿಣ ಒಳನಾಡಿನ ತುಮಕೂರು, ಮೈಸೂರು, ರಾಮನಗರ ಮತ್ತು ಕೋಲಾರ ಜಿಲ್ಲೆಗಳಲ್ಲಿ ಮಧ್ಯಮ ಮಳೆಯ ನಿರೀಕ್ಷೆ ಇದೆ. ಉಳಿದ ಭಾಗಗಳಲ್ಲಿ ವ್ಯಾಪಕವಾಗಿ ಹಗುರ ಕೂಡಿದ ಮಳೆಯಾಗಲಿದೆ. ಇನ್ನೂ ಉತ್ತರ ಒಳನಾಡಿನ ಹಾವೇರಿ, ಗದಗ, ವಿಜಯಪುರ, ಬಾಗಲಕೋಟೆ, ಧಾರವಾಡ, ಕೊಪ್ಪಳ, ಬೆಳಗಾವಿ ಮತ್ತು ವಿಜಯನಗರ ಜಿಲ್ಲೆಗಳಲ್ಲಿ ಸಾಧಾರಣ ಮಳೆಯಾಗುವ ಸಾಧ್ಯತೆಯಿದೆ.

ಮಲೆನಾಡಿನ ಶಿವಮೊಗ್ಗ, ಹಾಸನ, ಚಿಕ್ಕಮಗಳೂರು, ಕೊಡಗು ಜಿಲ್ಲೆಗಳಲ್ಲಿ ಭಾರೀ ಮಳೆಯಾಗುವ ಸಾಧ್ಯತೆ ಇದೆ. ಕರಾವಳಿಯ ದಕ್ಷಿಣ ಕನ್ನಡ, ಉಡುಪಿ ಮತ್ತು ಉತ್ತರ ಕನ್ನಡದಲ್ಲಿ ಮಳೆಯು ಸಾಧಾರಣವಾಗಿದೆ. ರಾಜಧಾನಿ ಬೆಂಗಳೂರಲ್ಲಿ ಗುಡುಗು ಸಹಿತ ಭಾರೀ ಮಳೆಯಾಗುವ ಸಾಧ್ಯತೆ ಇದೆ. ಗರಿಷ್ಠ ಮತ್ತು ಕನಿಷ್ಠ ತಾಪಮಾನ 29 ಮತ್ತು 21 ಡಿ.ಸೆ ಇರಲಿದೆ.

ಇದನ್ನೂ ಓದಿ: Karnataka Rain : ಭಾರಿ ಮಳೆಗೆ ಕರೆಂಟ್‌ ಕಟ್‌, ಕತ್ತಲಲ್ಲೇ ರೋಗಿಗಳಿಗೆ ಟ್ರೀಟ್‌ಮೆಂಟ್‌; ಮರ ಬಿದ್ದರೂ ಪಾರಾದ ತಾಯಿ-ಮಗ

8 ಜಿಲ್ಲೆಗಳಲ್ಲಿ ಮಳೆ ರುದ್ರ ನರ್ತನ

ಗುಡುಗು ಸಹಿತ ಭಾರಿ ಮಳೆಯೊಂದಿಗೆ ಗಂಟೆಗೆ 30-40 ಕಿ.ಮೀ ವೇಗದಲ್ಲಿ ಗಾಳಿ ಬೀಸಲಿದೆ. ಹೀಗಾಗಿ ಕೊಡಗು ಜಿಲ್ಲೆಗೆ ಆರೆಂಜ್ ಅಲರ್ಟ್ ಘೋಷಿಸಲಾಗಿದೆ. ದಕ್ಷಿಣ ಕನ್ನಡ, ಉಡುಪಿ, ಉತ್ತರ ಕನ್ನಡ, ಚಿಕ್ಕಮಗಳೂರು, ಹಾಸನ, ಮೈಸೂರು ಮತ್ತು ಶಿವಮೊಗ್ಗದಲ್ಲೂ ವ್ಯಾಪಕ ಮಳೆಯಾಗುವ ಸಾಧ್ಯತೆ ಇದೆ. ಹೀಗಾಗಿ ಯೆಲ್ಲೋ ಅಲರ್ಟ್ ಘೋಷಿಸಲಾಗಿದೆ. ಅದಷ್ಟು ಈ ಭಾಗದ ಜನರು ಮರದಡಿ ನಿಲ್ಲುವುದು, ಮಳೆ ಸಮಯದಲ್ಲಿ ವಾಹನ ಚಲಾಯಿಸುವುದನ್ನು ತಪ್ಪಿಸುವಂತೆ ಸಲಹೆ ನೀಡಲಾಗಿದೆ.

ಭಾರಿ ಮಳೆಗೆ ಕರೆಂಟ್‌ ಕಟ್‌, ಕತ್ತಲಲ್ಲೇ ರೋಗಿಗಳಿಗೆ ಟ್ರೀಟ್‌ಮೆಂಟ್‌

ಬೆಂಗಳೂರು/ಚಿತ್ರದುರ್ಗ: ರಾಜ್ಯದ ಹಲವೆಡೆ ವರುಣಾರ್ಭಟಕ್ಕೆ ಅವಾಂತರವೇ (Karnataka Rain ) ಸೃಷ್ಟಿಯಾಗಿದೆ. ಚಿತ್ರದುರ್ಗ ಜಿಲ್ಲೆಯಲ್ಲಿ ಭಾರಿ ಮಳೆಯಿಂದಾಗಿ (Karnataka weather) ಕರೆಂಟ್ ಕಟ್ ಆಗಿದ್ದು, ದೀಪದ ಬೆಳಕಿನಲ್ಲಿ ವೈದ್ಯರು ರೋಗಿಗಳಿಗೆ ಚಿಕಿತ್ಸೆ ನೀಡಿದ ಘಟನೆ ನಡೆದಿದೆ. ಚಿತ್ರದುರ್ಗ ಜಿಲ್ಲೆ ಮೊಳಕಾಲ್ಮೂರು ತಾಲೂಕು ಆಸ್ಪತ್ರೆಯಲ್ಲಿ ಒಂದು ವಾರದಿಂದ ಜನರೇಟರ್ ಕೆಟ್ಟು ಹೋಗಿದ್ದು, ಸರಿಪಡಿಸದೇ ಅಧಿಕಾರಿಗಳು ಸುಮ್ಮನಾಗಿದ್ದಾರೆ. ಸೋಮವಾರ ರಾತ್ರಿ ಸುರಿದ ಮಳೆಯಿಂದ (rain News) ಆಸ್ಪತ್ರೆಯಲ್ಲಿ ವಿದ್ಯುತ್ ಸಂಪರ್ಕ ಇಲ್ಲದೇ ರೋಗಿಗಳಿಗೆ ಮೇಣದ ಬತ್ತಿ ಹಿಡಿದು ವೈದ್ಯರು ಚಿಕಿತ್ಸೆ ನೀಡಿದ್ದಾರೆ.

ಕುಮಟಾದಲ್ಲಿ ಮಳೆಗೆ ಮನೆ ಮೇಲೆ ಬಿದ್ದ ಬೃಹತ್‌ ಮರ

ಉತ್ತರಕನ್ನಡ ಜಿಲ್ಲೆಯ ಕುಮಟಾ ತಾಲೂಕಿನ ದೇವರಹಕ್ಕಲ ಗ್ರಾಮದಲ್ಲಿ ಮಳೆಗೆ ಭಾರೀ ಗಾತ್ರದ ಮರ ಬಿದ್ದು ಮನೆಗೆ ಹಾನಿಯಾಗಿದೆ. ಲಲಿತಾ ನಾಯ್ಕ ಎಂಬುವವರ ಮನೆಯ ಮೇಲೆ ಮರ ಬಿದ್ದ ಪರಿಣಾಮ ಎದುರಿದ್ದ ಸ್ಕೂಟಿ ಜಖಂಗೊಂಡಿದೆ. ಮನೆಯ ಮುಂಭಾಗದ ಕೋಣೆಯ ಚಾವಣಿ ಹಾನಿಯಾಗಿದೆ. ಮರ ಬಿದ್ದ ಪರಿಣಾಮ ಸ್ಕೂಟಿ, ಮನೆ ಸೇರಿ ಲಕ್ಷಾಂತರ ರೂಪಾಯಿ ಹಾನಿಯಾಗಿದೆ. ಅದೃಷ್ಟವಶಾತ್‌ ಯಾವುದೇ ಪ್ರಾಣ ಹಾನಿ ಆಗಿಲ್ಲ. ಸ್ಥಳಕ್ಕೆ ಕಂದಾಯ ಇಲಾಖೆ ಅಧಿಕಾರಿಗಳು ಭೇಟಿ ನೀಡಿ ಪರಿಶೀಲನೆ ನಡೆಸಿದ್ದಾರೆ.

ಚಿಕ್ಕಮಗಳೂರಲ್ಲಿ ಕೆರೆ ಏರಿ ತುಂಡು

ಚಿಕ್ಕಮಗಳೂರು ಜಿಲ್ಲೆಯಲ್ಲಿ ಮಳೆ ಅವಾಂತರ ಮುಂದುವರೆದಿದೆ. ಮಳೆಯ ಆರ್ಭಟಕ್ಕೆ ಕೆರೆಯ ಏರಿ ಹೊಡೆದು ನೀರು ಪೋಲಾಗಿದೆ. ಕಡೂರು ತಾಲೂಕಿನ ಗೌಡನ ಕಟ್ಟೆ ಗ್ರಾಮದಲ್ಲಿರುವ ಗೌಡನಕಟ್ಟೆ ಕೆರೆಯು ಕಳೆದ ಮೂರು ನಾಲ್ಕು ದಿನಗಳಿಂದ ಸುರಿದ ಮಳೆಗೆ ಭರ್ತಿಯಾಗಿದೆ. ಪರಿಣಾಮ ಕೆರೆ ಏರಿ ತುಂಡಾಗಿ ಪಿ ಕೋಡಿಹಳ್ಳಿ ಕೆರೆಗೆ ನೀರು ಹರಿವು ಹೆಚ್ಚಾಗಿದೆ. ಭಾರಿ ಪ್ರಮಾಣದ ನೀರಿನ ಒತ್ತಡ ತಡೆಯಲಾಗದೆ ಕೆರೆ ಏರಿ ಹಿಂಭಾಗದ ತೋಟ ಜಮೀನುಗಳು ಜಲಾವೃತಗೊಂಡಿತ್ತು.

ಕಾರುಗಳ ಮೇಲೆ ಬಿದ್ದ ಮರ; ಅಪಾಯದಿಂದ ಪಾರಾದ ತಾಯಿ-ಮಗ

ದಾವಣಗೆರೆ ಆಶೋಕ್ ಟಾಕೀಸ್ ಬಳಿ ಚಲಿಸುತ್ತಿದ್ದ ಕಾರುಗಳ ಮೇಲೆ ಮರವೊಂದು ಬಿದ್ದಿತ್ತು. ಪರಿಣಾಮ ಡಸ್ಟರ್ ಕಾರು ನಜ್ಜುಗುಜ್ಜಾಗಿತ್ತು. ಡಸ್ಟರ್‌ ಕಾರು ಚಾಲಕ ಹಾಗೂ ಮತ್ತೊಂದು ಕಾರಿನಲ್ಲಿದ್ದ ಚಿಕ್ಕ ಮಗು ಹಾಗು ಮಹಿಳೆ ಪ್ರಾಣಾಪಾಯದಿಂದ ಪಾರಾಗಿದ್ದರು. ಘಟನಾ ಸ್ಥಳಕ್ಕೆ ಟ್ರಾಫಿಕ್ ಪೊಲೀಸರು ಭೇಟಿ ನೀಡಿ ಕ್ರೇನ್ ಮೂಲಕ ಮರ ತೆರವು ಮಾಡಿದರು.

ದಾವಣಗೆರೆ ಜೆಲ್ಲೆಯ ಜಗಳೂರು ತಾಲೂಕಿನ ಗಡೆಮಾಕುಂಟೆ, ಭರಮಸಮುದ್ರ, ಮರಿಕಟ್ಟೆ, ತುಂಬಿನಕಟ್ಟೆ, ಕ್ಯಾಸೇನಹಳ್ಳಿ, ತಮ್ಮಲೇಹಳ್ಳಿ ಸೇರಿದಂತೆ ಬಹುತೇಕ ಕಡೆ ತಡ ರಾತ್ರಿ ಭರ್ಜರಿ ಮಳೆಯಾಗಿದೆ. ಇದರಿಂದಾಗಿ ಗಡೆಮಾಕುಂಟೆ ಹಾಗೂ ಭರಮಸಮುದ್ರ ಕೆರೆಗಳು ಭರ್ತಿಯಾಗಿವೆ. ಇನ್ನೂ ಖಾಲಿಯಾದ ಕೆರೆಯಲ್ಲಿ ನೀರು ಕಂಡು ರೈತರ ಮುಖದಲ್ಲಿ ಮಂದಹಾಸ ಮೂಡಿದೆ.

ಈ ಸಂಗತಿಯ ಕುರಿತು ನಿಮ್ಮ ಅನಿಸಿಕೆ ಏನು? ಕಾಮೆಂಟ್ ಮೂಲಕ ತಿಳಿಸಿ

Continue Reading

ಮಳೆ

Karnataka Rain : ಭಾರಿ ಮಳೆಗೆ ಕರೆಂಟ್‌ ಕಟ್‌, ಕತ್ತಲಲ್ಲೇ ರೋಗಿಗಳಿಗೆ ಟ್ರೀಟ್‌ಮೆಂಟ್‌; ಮರ ಬಿದ್ದರೂ ಪಾರಾದ ತಾಯಿ-ಮಗ

Karnataka Rain : ರಾಜ್ಯದಲ್ಲಿ ಮಳೆ ಅವಾಂತರವು (Rain news) ಮುಂದುವರಿದಿದೆ. ಭಾರಿ ಮಳೆಗೆ ಹಲವೆಡೆ ಮರಗಳು ಉರುಳಿದ್ದರೆ, ಬೆಳೆಗೆಳು ನೆಲಸಮವಾಗಿತ್ತು. ಇತ್ತ ವಿದ್ಯುತ್‌ ಸಂಪರ್ಕ ಇಲ್ಲದೆ ರೋಗಿಗಳಿಗೆ ವೈದ್ಯರು ಕತ್ತಲಲ್ಲೇ ಚಿಕಿತ್ಸೆ ಕೊಡುವಂತೆ ಆಯಿತು. ಮನೆಗಳಿಗೆ ಮಳೆ ನೀರಿನ ಜತಗೆ ಚರಂಡಿ ನೀರು ನುಗ್ಗಿತ್ತು.ರಸ್ತೆ ಎಲ್ಲವೂ ಕೆರೆಯಂತಾಗಿತ್ತು.

VISTARANEWS.COM


on

By

Karnataka Rain
Koo

ಬೆಂಗಳೂರು/ಚಿತ್ರದುರ್ಗ: ರಾಜ್ಯದ ಹಲವೆಡೆ ವರುಣಾರ್ಭಟಕ್ಕೆ ಅವಾಂತರವೇ (Karnataka Rain ) ಸೃಷ್ಟಿಯಾಗಿದೆ. ಚಿತ್ರದುರ್ಗ ಜಿಲ್ಲೆಯಲ್ಲಿ ಭಾರಿ ಮಳೆಯಿಂದಾಗಿ (Karnataka weather) ಕರೆಂಟ್ ಕಟ್ ಆಗಿದ್ದು, ದೀಪದ ಬೆಳಕಿನಲ್ಲಿ ವೈದ್ಯರು ರೋಗಿಗಳಿಗೆ ಚಿಕಿತ್ಸೆ ನೀಡಿದ ಘಟನೆ ನಡೆದಿದೆ. ಚಿತ್ರದುರ್ಗ ಜಿಲ್ಲೆ ಮೊಳಕಾಲ್ಮೂರು ತಾಲೂಕು ಆಸ್ಪತ್ರೆಯಲ್ಲಿ ಒಂದು ವಾರದಿಂದ ಜನರೇಟರ್ ಕೆಟ್ಟು ಹೋಗಿದ್ದು, ಸರಿಪಡಿಸದೇ ಅಧಿಕಾರಿಗಳು ಸುಮ್ಮನಾಗಿದ್ದಾರೆ. ಸೋಮವಾರ ರಾತ್ರಿ ಸುರಿದ ಮಳೆಯಿಂದ (rain News) ಆಸ್ಪತ್ರೆಯಲ್ಲಿ ವಿದ್ಯುತ್ ಸಂಪರ್ಕ ಇಲ್ಲದೇ ರೋಗಿಗಳಿಗೆ ಮೇಣದ ಬತ್ತಿ ಹಿಡಿದು ವೈದ್ಯರು ಚಿಕಿತ್ಸೆ ನೀಡಿದ್ದಾರೆ.

ಕುಮಟಾದಲ್ಲಿ ಮಳೆಗೆ ಮನೆ ಮೇಲೆ ಬಿದ್ದ ಬೃಹತ್‌ ಮರ

ಉತ್ತರಕನ್ನಡ ಜಿಲ್ಲೆಯ ಕುಮಟಾ ತಾಲೂಕಿನ ದೇವರಹಕ್ಕಲ ಗ್ರಾಮದಲ್ಲಿ ಮಳೆಗೆ ಭಾರೀ ಗಾತ್ರದ ಮರ ಬಿದ್ದು ಮನೆಗೆ ಹಾನಿಯಾಗಿದೆ. ಲಲಿತಾ ನಾಯ್ಕ ಎಂಬುವವರ ಮನೆಯ ಮೇಲೆ ಮರ ಬಿದ್ದ ಪರಿಣಾಮ ಎದುರಿದ್ದ ಸ್ಕೂಟಿ ಜಖಂಗೊಂಡಿದೆ. ಮನೆಯ ಮುಂಭಾಗದ ಕೋಣೆಯ ಚಾವಣಿ ಹಾನಿಯಾಗಿದೆ. ಮರ ಬಿದ್ದ ಪರಿಣಾಮ ಸ್ಕೂಟಿ, ಮನೆ ಸೇರಿ ಲಕ್ಷಾಂತರ ರೂಪಾಯಿ ಹಾನಿಯಾಗಿದೆ. ಅದೃಷ್ಟವಶಾತ್‌ ಯಾವುದೇ ಪ್ರಾಣ ಹಾನಿ ಆಗಿಲ್ಲ. ಸ್ಥಳಕ್ಕೆ ಕಂದಾಯ ಇಲಾಖೆ ಅಧಿಕಾರಿಗಳು ಭೇಟಿ ನೀಡಿ ಪರಿಶೀಲನೆ ನಡೆಸಿದ್ದಾರೆ.

ಚಿಕ್ಕಮಗಳೂರಲ್ಲಿ ಕೆರೆ ಏರಿ ತುಂಡು

ಚಿಕ್ಕಮಗಳೂರು ಜಿಲ್ಲೆಯಲ್ಲಿ ಮಳೆ ಅವಾಂತರ ಮುಂದುವರೆದಿದೆ. ಮಳೆಯ ಆರ್ಭಟಕ್ಕೆ ಕೆರೆಯ ಏರಿ ಹೊಡೆದು ನೀರು ಪೋಲಾಗಿದೆ. ಕಡೂರು ತಾಲೂಕಿನ ಗೌಡನ ಕಟ್ಟೆ ಗ್ರಾಮದಲ್ಲಿರುವ ಗೌಡನಕಟ್ಟೆ ಕೆರೆಯು ಕಳೆದ ಮೂರು ನಾಲ್ಕು ದಿನಗಳಿಂದ ಸುರಿದ ಮಳೆಗೆ ಭರ್ತಿಯಾಗಿದೆ. ಪರಿಣಾಮ ಕೆರೆ ಏರಿ ತುಂಡಾಗಿ ಪಿ ಕೋಡಿಹಳ್ಳಿ ಕೆರೆಗೆ ನೀರು ಹರಿವು ಹೆಚ್ಚಾಗಿದೆ. ಭಾರಿ ಪ್ರಮಾಣದ ನೀರಿನ ಒತ್ತಡ ತಡೆಯಲಾಗದೆ ಕೆರೆ ಏರಿ ಹಿಂಭಾಗದ ತೋಟ ಜಮೀನುಗಳು ಜಲಾವೃತಗೊಂಡಿತ್ತು.

ಕಾರುಗಳ ಮೇಲೆ ಬಿದ್ದ ಮರ; ಅಪಾಯದಿಂದ ಪಾರಾದ ತಾಯಿ-ಮಗ

ದಾವಣಗೆರೆ ಆಶೋಕ್ ಟಾಕೀಸ್ ಬಳಿ ಚಲಿಸುತ್ತಿದ್ದ ಕಾರುಗಳ ಮೇಲೆ ಮರವೊಂದು ಬಿದ್ದಿತ್ತು. ಪರಿಣಾಮ ಡಸ್ಟರ್ ಕಾರು ನಜ್ಜುಗುಜ್ಜಾಗಿತ್ತು. ಡಸ್ಟರ್‌ ಕಾರು ಚಾಲಕ ಹಾಗೂ ಮತ್ತೊಂದು ಕಾರಿನಲ್ಲಿದ್ದ ಚಿಕ್ಕ ಮಗು ಹಾಗು ಮಹಿಳೆ ಪ್ರಾಣಾಪಾಯದಿಂದ ಪಾರಾಗಿದ್ದರು. ಘಟನಾ ಸ್ಥಳಕ್ಕೆ ಟ್ರಾಫಿಕ್ ಪೊಲೀಸರು ಭೇಟಿ ನೀಡಿ ಕ್ರೇನ್ ಮೂಲಕ ಮರ ತೆರವು ಮಾಡಿದರು.

ದಾವಣಗೆರೆ ಜೆಲ್ಲೆಯ ಜಗಳೂರು ತಾಲೂಕಿನ ಗಡೆಮಾಕುಂಟೆ, ಭರಮಸಮುದ್ರ, ಮರಿಕಟ್ಟೆ, ತುಂಬಿನಕಟ್ಟೆ, ಕ್ಯಾಸೇನಹಳ್ಳಿ, ತಮ್ಮಲೇಹಳ್ಳಿ ಸೇರಿದಂತೆ ಬಹುತೇಕ ಕಡೆ ತಡ ರಾತ್ರಿ ಭರ್ಜರಿ ಮಳೆಯಾಗಿದೆ. ಇದರಿಂದಾಗಿ ಗಡೆಮಾಕುಂಟೆ ಹಾಗೂ ಭರಮಸಮುದ್ರ ಕೆರೆಗಳು ಭರ್ತಿಯಾಗಿವೆ. ಇನ್ನೂ ಖಾಲಿಯಾದ ಕೆರೆಯಲ್ಲಿ ನೀರು ಕಂಡು ರೈತರ ಮುಖದಲ್ಲಿ ಮಂದಹಾಸ ಮೂಡಿದೆ.

ಇದನ್ನೂ ಓದಿ: Road Accident : ತಾಯಿ-ಮಗನ ಬಲಿ ಪಡೆದ ಕಂಟೇನರ್‌; ಆಟೋ ಪ್ರಯಾಣಿಕ ಸೇರಿ ಸವಾರರಿಬ್ಬರ ಪ್ರಾಣ ಕಸಿದ ಬೈಕ್‌

ವಿಜಯನಗರದಲ್ಲಿ ಕೊಚ್ಚಿ ಹೋದ ರೋಡ್‌

ವಿಜಯನಗರ ಜಿಲ್ಲೆಯ ಕೂಡ್ಲಿಗಿ ತಾಲೂಕಿನಲ್ಲಿ ಮಳೆ ನೀರಿನ ರಭಸಕ್ಕೆ ರಸ್ತೆಯೇ ಕೊಚ್ಚಿ ಹೋಗಿತ್ತು. ಇದರಿಂದಾಗಿ ಕೂಡ್ಲಿಗಿ ತಾಲೂಕಿನ ಯಂಬ್ಳಿ- ಆಲೂರು ಗ್ರಾಮಗಳ ಮಾರ್ಗ ರಸ್ತೆ ಸಂಪರ್ಕ ಕಟ್ ಆಗಿತ್ತು. ರಸ್ತೆ ಸಂಪರ್ಕ ಇಲ್ಲದೆ ವಾಹನ ಸವಾರರು ಪರದಾಡಬೇಕಾಯಿತು.

ತುಮಕೂರಿನಲ್ಲಿ ನೀರಿನಲ್ಲಿ ಸಿಲುಕಿದ ಲಾರಿ ಹಾಗೂ ಬಸ್

ಮಳೆಯಿಂದ ಜಲಾವೃತವಾದ ರಸ್ತೆಯಲ್ಲಿ ಸಂಚಾರಿಸಿದ ಪರಿಣಾಮ ಲಾರಿ- ಬಸ್ಸು ಕೆಸರಿನಲ್ಲಿ ಸಿಲುಕಿದ ಘಟನೆ ತುಮಕೂರು ಜಿಲ್ಲೆಯ ಶಿರಾ ತಾಲೂಕಿನ ಲಕ್ಕನಹಳ್ಳಿ ನಡೆದಿದೆ. ಶಿರಾ- ಅಮರಾಪುರ ರಸ್ತೆ ಕಾಮಗಾರಿ ನಿಧಾನವಾಗಿ ನಡೆಯುತ್ತಿರುವುದರಿಂದ ಬಿಡ್ಜ್ ಕಾಮಗಾರಿ ಬಳಿ‌ ರಸ್ತೆಯು ಜಲಾವೃತಗೊಂಡು ಸವಾರರು ಪರದಾಡುವಂತಾಗಿದೆ.

ಇನ್ನೂ ತುಮಕೂರು ಜಿಲ್ಲೆ ಪಾವಗಡ ತಾಲೂಕಿನ ಅರಸಿಕೆರೆ ಗ್ರಾಮದಲ್ಲಿ ಗಾಳಿ- ಮಳೆ ರಭಸಕ್ಕೆ ಅಡಿಕೆ ಮರಗಳು ನೆಲಕ್ಕುರುಳಿದ್ದವು. ರೈತ ಪ್ರಕಾಶ್ ಎಂಬುವರಿಗೆ ಸೇರಿದ 12 ವರ್ಷದ ಹಳೇ ಅಡಿಕೆ ಮರಗಳು ಫಸಲಿಗೆ ಬಂದಿತ್ತು. ಇದೀಗ ಮಳೆಯಿಂದಾಗಿ ಅಂದಾಜು 2 ಲಕ್ಷ ರೂಪಾಯಿ ನಷ್ಟವಾಗಿದೆ.

ಮೈಸೂರಿನಲ್ಲಿ ಕೆರೆಯಂತಾದ ಜಮೀನುಗಳು

ಮೈಸೂರು ಜಿಲ್ಲೆಯಲ್ಲಿ ಮಳೆಯು ಮುಂದುವರಿದ್ದು, ಹುಣಸೂರು ತಾಲೂಕಿನ ಜಮೀನುಗಳಲ್ಲಿ ಜಲಾವೃತಗೊಂಡಿತ್ತು. ನೂರಾರು ಎಕರೆ ಬೆಳೆದ ಶುಂಠಿ, ತಂಬಾಕು ಬೆಳೆ ನಾಶವಾಗಿತ್ತು. ಗ್ರಾಮದ ಜಮೀನುಗಳು ಕೆರೆಗಳಂತಾಗಿತ್ತು. ಇತ್ತ ಬಿರುಗಾಳಿ ಮಳೆಗೆ ಮನೆ ಚಾವಣಿ, ಬ್ಯಾರನ್‌ ಹಾರಿಹೋಗಿತ್ತು. ಮೈಸೂರಿನ ಅತ್ತಿಕುಪ್ಪೆಯಲ್ಲಿ ಕೆರೆ ಕೋಡಿ ಒಡೆದು ಬೆಳೆ ನಾಶವಾಗಿತ್ತು. ಇದರಿಂದಾಗಿ ತೆಂಗಿನ ಸಸಿಗಳು ಕೊಚ್ಚಿಹೋಗಿದ್ದವು. ಹನಗೋಡು ಹೋಬಳಿ ಕಚುವಿನಹಳ್ಳಿ ಗ್ರಾಮದ ಜಯಮ್ಮ ಮತ್ತು ಲಲಿತಮ್ಮರಿಗೆ ಸೇರಿದ ತಂಬಾಕು ಹದಗೊಳಿಸುವ ಬ್ಯಾರನ್ ಗೋಡೆ ಕುಸಿದಿತ್ತು. ಚಿಲ್ಕುಂದ ಗ್ರಾಮದಲ್ಲಿ ಬಿರುಗಾಳಿಗೆ ರಾಮಶೆಟ್ಟರ ಮನೆ ಚಾವಣಿ ಹಾಗೂ ಚಂದ್ರುರವರ ಕೊಟ್ಟಿಗೆಗೆ ಹಾಕಿದ್ದ ಕಲ್ನಾರ್ ಶೀಟ್ ಹಾರಿ ಹೋಗಿದೆ. ಇತ್ತ ಸುಜ್ಜಲೂರು ಗ್ರಾಮದಲ್ಲಿ ಮನೆಗಳಿಗೆ ಚರಂಡಿ ನೀರು ನುಗ್ಗಿತ್ತು.

ಕೆರೆ ನೀರಲ್ಲಿ ಕೊಚ್ಚಿ ಹೋಗುತ್ತಿದ್ದ ಕರು

ಮೈಸೂರು ಮಳೆ ಅವಾಂತರಕ್ಕೆ ಜನರು ಹೈರಾಣಾಗಿದ್ದಾರೆ. ಕೆರೆ‌ ನೀರಲ್ಲಿ ಕೊಚ್ಚಿ ಹೋಗುತ್ತಿದ್ದ ಕರುವೊಂದನ್ನು ಯುವಕರು ರಕ್ಷಿಸಿದ ಘಟನೆ ಪಿರಿಯಾಪಟ್ಟಣ ತಾಲೂಕು ತರಿಕಲ್ ಗ್ರಾಮದಲ್ಲಿ ನಡೆದಿದೆ. ಹಾರನಹಳ್ಳಿ ಗ್ರಾಮದ ಶಿವಣ್ಣ ಅವರ ಹಸುವಿನ ಕರುವನ್ನು ರಕ್ಷಣೆ ಮಾಡಲಾಗಿತ್ತು. ಬಾಲಗೆರೆ ತುಂಬಿ ಕೋಡಿ ಒಡೆದ ಪರಿಣಾಮ ಬೆಟ್ಟದಪುರ- ಕುಶಾಲನಗರ ರಸ್ತೆ ಮೇಲೆ ಮಂಡಿಯುದ್ದ‌ ನೀರು ನಿಂತಿತ್ತು. ಮಳೆ‌ ನೀರಿನಲ್ಲಿ ತಂಬಾಕು ಸಸಿಗಳು, ಗಿಡಕ್ಕೆ ಸಿಂಪಡಿಸಲು ತಂದಿದ್ದ ರಸಾಯನಿಕ ವಸ್ತುಗಳು ಹಾಳಾಗಿದ್ದವು.

ವಿಜಯನಗರದಲ್ಲಿ ನೆಲಸಮವಾದ ವೀಳ್ಯದೆಲೆ ಬಳ್ಳಿ

ಭಾರಿ ಮಳೆಗೆ ವೀಳ್ಯದೆಲೆ ಬಳ್ಳಿ ತೋಟ ನೆಲಸಮವಾಗಿತ್ತು. ವಿಜಯನಗರದ ಕೂಡ್ಲಿಗಿ ತಾಲೂಕಿನ ಎಚ್. ಮ್ಯಾಸರಹಟ್ಟಿ ಗ್ರಾಮದಲ್ಲಿ ಘಟನೆ ನಡೆದಿದೆ. ದುಡಿಯುವ ಮಗನಂತೆ ಬೆಳೆದು ನಿಂತಿದ್ದ ಎಲೆಬಳ್ಳಿ ತೋಟ ನೆಲಕಚ್ಚಿತ್ತು. ಮಲ್ಲಮ್ಮ ಗಂಡ ಪೂಜಾರಿ ಮಾರಣ್ಣಗೆ ಸೇರಿದ ಒಂದು ಎಕರೆ ಎಲೆಬಳ್ಳಿ ತೋಟ ನೆಲಕ್ಕುರುಳಿದ್ದನ್ನು ಕಂಡು ಕಣ್ಣೀರುಇಟ್ಟರು.

ಮನೆಗಳಿಗೆ ನುಗ್ಗಿದ ಚರಂಡಿ ನೀರು

ಕೊಡಗು ಜಿಲ್ಲೆಯ ಗುಮ್ಮನ ಕೊಲ್ಲಿ ಚೌಡೇಶ್ವರಿ ಬಡಾವಣೆಯ ತಗ್ಗು ಪ್ರದೇಶಕ್ಕೆ ಚರಂಡಿ ನೀರು ನುಗ್ಗಿತ್ತು. ಚರಂಡಿ ನೀರು ಉಕ್ಕಿ ರಸ್ತೆ ಮೇಲೆ ಹರಿದ ಪರಿಣಾಮ ಮನೆಯಂಗಳಕ್ಕೆ ನೀರು ನುಗ್ಗಿತ್ತು. ಪ್ರವಾಹದಂತೆ ರಸ್ತೆ ತುಂಬೆಲ್ಲ ನೀರು ನಿಂತಿತ್ತು. ಇತ್ತ ದೊಡ್ಡಬಳ್ಳಾಪುರ ತಾಲೂಕಿನ ದೊಡ್ಡಬೆಳವಂಗಲದ ಅಜ್ಜನಕಟ್ಟೆಯಲ್ಲಿ 20 ಕ್ಕೂ ಹೆಚ್ಚು ಕುಟುಂಬಗಳು ಜಲದಿಗ್ಬಂಧನದಿಂದ ಓಡಾಡಲು ಪರದಾಡಬೇಕಾಯಿತು. ಇತ್ತ ಶಾಲಾ ಮಕ್ಕಳು ಕೆಸರಲ್ಲಿ ಬೀಳುವ ಆತಂಕದಲ್ಲಿಯೇ ಮನೆಯಿಂದ ಹೊರ ಬರುತ್ತಿದ್ದರು.ಕಾಲೋನಿಯಲ್ಲಿ ಎಮರ್ಜೆನ್ಸಿ ಅಂದರೆ ಆಂಬುಲೆನ್ಸ್ ಕೂಡ ಬರಲು ಆಗುತ್ತಿಲ್ಲ ಎಂದು ಸ್ಥಳೀಯರು ಅಸಮಾಧಾನ ಹೊರಹಾಕಿದರು.

ಈ ಸಂಗತಿಯ ಕುರಿತು ನಿಮ್ಮ ಅನಿಸಿಕೆ ಏನು? ಕಾಮೆಂಟ್ ಮೂಲಕ ತಿಳಿಸಿ

Continue Reading
Advertisement
IPL 2024
ಕ್ರೀಡೆ6 mins ago

IPL 2024 : ಮುಂದಿನ ವರ್ಷವೂ ಧೋನಿ ಐಪಿಎಲ್​ ಆಡ್ತಾರೆ; ಸಿಎಸ್​ಕೆ ಸಿಇಒ ಸ್ಪಷ್ಟನೆ

Golden Star Ganesh Krishnam Pranaya Sakhi movie first song release on May 25 in Mysore
ಸಿನಿಮಾ14 mins ago

Golden Star Ganesh: ಮೈಸೂರಿನಲ್ಲಿ ಮೇ 25ರಂದು ʼಕೃಷ್ಣಂ ಪ್ರಣಯ ಸಖಿʼ ಚಿತ್ರದ ಫಸ್ಟ್‌ ಸಾಂಗ್‌ ರಿಲೀಸ್‌

Prashant Kishor
ದೇಶ32 mins ago

Prashant Kishor: ಜೂನ್‌ 4ರಂದು ಪ್ರತಿಪಕ್ಷಗಳು ನೀರು ಕುಡಿಯಲಿವೆ; ಪ್ರಶಾಂತ್‌ ಕಿಶೋರ್‌ ಮಾತಿನ ಮರ್ಮವೇನು?

Virat Kohli
ಕ್ರೀಡೆ34 mins ago

Virat Kohli : ಕೊಹ್ಲಿಗೆ ಗೌರವ ಸಲ್ಲಿಸಲೇಬೇಕು ಎಂದು ಹೇಳಿದ ಆಸ್ಟ್ರೇಲಿಯಾದ ಮಾಜಿ ಬ್ಯಾಟರ್​​

Karnataka rain
ಮಳೆ1 hour ago

Karnataka Rain : ಮಳೆ ಅವಘಡಕ್ಕೆ ಜನರು ತತ್ತರ; ಧರೆಗುರುಳಿದ ಮರಗಳು, ಕುಸಿದು ಬಿದ್ದ ಮನೆಗಳು

Shivasharane Hemaraddi Mallamma Jayanti celebration in Srisailam
ಯಾದಗಿರಿ1 hour ago

Yadgiri News: ಶ್ರೀಶೈಲಂನಲ್ಲಿ ಶಿವಶರಣೆ ಹೇಮರಡ್ಡಿ ಮಲ್ಲಮ್ಮ ಜಯಂತಿ

union minister Pralhad Joshi latest statement in bidar
ಕರ್ನಾಟಕ1 hour ago

Pralhad Joshi: ಅಮಾಯಕ ಹೆಣ್ಣುಮಕ್ಕಳ ಹತ್ಯೆಯಾದರೂ ಪೊಲೀಸರ ಮೌನ; ಪ್ರಲ್ಹಾದ ಜೋಶಿ ಆರೋಪ

Rave party 86 people including Hema and Ashi consumed drugs in the rave party Blood report positive
ಕ್ರೈಂ1 hour ago

Rave party: ರೇವ್‌ ಪಾರ್ಟಿಯಲ್ಲಿ ಹೇಮಾ, ಆಶಿ ಸೇರಿ 86 ಮಂದಿಯಿಂದ ಮಾದಕ ವಸ್ತು ಸೇವನೆ; ಬ್ಲಡ್‌ ರಿಪೋರ್ಟ್‌ ಪಾಸಿಟಿವ್‌

Remedies For SadeSati
ಧಾರ್ಮಿಕ1 hour ago

Remedies For SadeSati: ಶನಿಯ ವಕ್ರದೃಷ್ಟಿ ಕಡಿಮೆ ಮಾಡಲು ಇಲ್ಲಿದೆ ಸುಲಭ ಪರಿಹಾರ

Sharad Kelkar
ಸಿನಿಮಾ1 hour ago

Sharad Kelkar: ‘ಬಾಹುಬಲಿ’ಗೆ ಧ್ವನಿ ನೀಡಿದ್ದು ಮರೆಯಲಾಗದ ಅನುಭವ ಎಂದ ಶರದ್ ಕೇಳ್ಕರ್

Sharmitha Gowda in bikini
ಕಿರುತೆರೆ8 months ago

Geetha Serial Kannada: ನಿದ್ದೆ ಕದ್ದ ಚೋರಿ! ನಟಿ `ಭಾನುಮತಿ’ ಹಾಟ್‌ ಪೋಟೊಗಳಿಗೆ ಫ್ಯಾನ್ಸ್ ಫುಲ್ ಫಿದಾ

Kannada Serials
ಕಿರುತೆರೆ7 months ago

Kannada Serials TRP: 2ನೇ ಸ್ಥಾನದಲ್ಲಿ 2 ಧಾರಾವಾಹಿಗಳು; ಟಿಆರ್‌ಪಿ ರೇಸ್‌ನಲ್ಲಿಲ್ಲ ಭಾಗ್ಯಲಕ್ಷ್ಮೀ!

Bigg Boss- Saregamapa 20 average TRP
ಕಿರುತೆರೆ7 months ago

Kannada Serials TRP: ಏಳನೇ ಸ್ಥಾನಕ್ಕೆ ʻಅಮೃತಧಾರೆʼ ಕುಸಿತ; ಬಿಗ್‌ ಬಾಸ್‌-ಸರಿಗಮಪ ಟಿಆರ್‌ಪಿ ಎಷ್ಟು?

galipata neetu
ಕಿರುತೆರೆ6 months ago

Kanyadana Serial: ಕಿರುತೆರೆಗೆ ಮತ್ತೆ ಎಂಟ್ರಿ ಕೊಟ್ಟ ʻಗಾಳಿಪಟʼ ಖ್ಯಾತಿಯ ʻನೀತುʼ!

Kannada Serials
ಕಿರುತೆರೆ8 months ago

Kannada Serials TRP: ನಾಲ್ಕನೇ ಸ್ಥಾನಕ್ಕೆ ಕುಸಿತ ಕಂಡ ʻಸೀತಾ ರಾಮʼ; ಟಿಆರ್‌ಪಿ ರೇಸ್‌ಗೆ ʻಭಾಗ್ಯಲಕ್ಷ್ಮಿʼ ಬ್ಯಾಕ್‌!

Kannada Serials
ಕಿರುತೆರೆ8 months ago

Kannada Serials TRP: ಟಿಆರ್‌ಪಿಯಲ್ಲಿ ʻಭಾಗ್ಯಲಕ್ಷ್ಮೀʼ ಹವಾ; ʻಪುಟ್ಟಕ್ಕನ ಮಕ್ಕಳುʼ ಧಾರಾವಾಹಿಗೆ ಸಂಕಷ್ಟ!

Bigg Boss' dominates TRP; Sita Rama fell to the sixth position
ಕಿರುತೆರೆ7 months ago

Kannada Serials TRP: ಟಿಆರ್‌ಪಿಯಲ್ಲಿ ʻಬಿಗ್ ಬಾಸ್ʼದೇ ಮೇಲುಗೈ; 6ನೇ ಸ್ಥಾನಕ್ಕೆ ಕುಸಿದ ʻಸೀತಾ ರಾಮʼ

geetha serial Dhanush gowda engagement
ಕಿರುತೆರೆ5 months ago

Dhanush Gowda: ಗೀತಾ ಧಾರಾವಾಹಿ ನಟನ ನಿಶ್ಚಿತಾರ್ಥ; ಭವ್ಯಾಳ ಕಮೆಂಟ್‌ ಬಾಕ್ಸ್‌ ಆಫ್‌!

varun
ಕಿರುತೆರೆ6 months ago

Brindavana Serial: ʼಬೃಂದಾವನʼ ಧಾರಾವಾಹಿಯಲ್ಲಿ ದೊಡ್ಡ ಟ್ವಿಸ್ಟ್‌; ಪ್ರಮುಖ ಪಾತ್ರಧಾರಿಯೇ ಬದಲು

Kannada Serials
ಕಿರುತೆರೆ8 months ago

Kannada Serials TRP: ಟಿಆರ್‌ಪಿಯಲ್ಲಿ ಏರಿಕೆ ಕಂಡ ʻಅಮೃತಧಾರೆʼ; ʻಗಟ್ಟಿಮೇಳʼಕ್ಕೆ ನಾಲ್ಕನೇ ಸ್ಥಾನ!

dina bhavishya read your daily horoscope predictions for May 23 2024
ಭವಿಷ್ಯ15 hours ago

Dina Bhavishya : 12 ರಾಶಿಯವರ ಇಂದಿನ ಭವಿಷ್ಯ ಹೇಗಿದೆ? ಯಾರಿಗೆ ಶುಭ, ಯಾರಿಗೆ ಅಶುಭ ಫಲ?

Karnataka Weather Forecast
ಮಳೆ2 days ago

Karnataka Weather : ಮುಂದುವರಿಯಲಿದೆ ವರುಣಾರ್ಭಟ; ಬೆಂಗಳೂರಲ್ಲೂ ಭಾರಿ ಮಳೆ ನಿರೀಕ್ಷೆ!

Karnataka Rain
ಮಳೆ2 days ago

Karnataka Rain : ಭಾರಿ ಮಳೆಗೆ ಕರೆಂಟ್‌ ಕಟ್‌, ಕತ್ತಲಲ್ಲೇ ರೋಗಿಗಳಿಗೆ ಟ್ರೀಟ್‌ಮೆಂಟ್‌; ಮರ ಬಿದ್ದರೂ ಪಾರಾದ ತಾಯಿ-ಮಗ

Love Case Father throws hot water on man who loved his daughter for coming home
ಕೊಡಗು2 days ago

Love Case : ಮನೆಗೆ ಬಂದ ಪ್ರೇಮಿಗೆ ಕೊತ ಕೊತ ಕುದಿಯುವ ನೀರು ಎರಚಿದ ಯುವತಿ ತಂದೆ!

Contaminated Water
ಮೈಸೂರು2 days ago

Contaminated Water : ಡಿ ಸಾಲುಂಡಿಯಲ್ಲಿ ಕಲುಷಿತ ನೀರು ಸೇವಿಸಿ ಅಸ್ವಸ್ಥಗೊಂಡಿದ್ದ ಯುವಕ ಸಾವು

Karnataka Rain
ಮಳೆ3 days ago

Karnataka Rain : ಬಂಗಾಳ ಕೊಲ್ಲಿಯಲ್ಲಿ ವಾಯುಭಾರ ಕುಸಿತ; ಸಮುದ್ರಕ್ಕಿಳಿಯದಂತೆ ಮೀನುಗಾರರಿಗೆ ಎಚ್ಚರಿಕೆ

Karnataka Rain
ಮಳೆ4 days ago

Karnataka Rain : ಒಂದೇ ಮಳೆಗೆ ಹೊಳೆಯಂತಾದ ಬೆಂಗಳೂರು ರಸ್ತೆಗಳು! ಕಳಸದಲ್ಲೂ ಮುಂದುವರಿದ ಅಬ್ಬರ

Karnataka rain
ಮಳೆ4 days ago

Karnataka Rain : ವಿಜಯನಗರದಲ್ಲಿ ಸಿಡಿಲಿಗೆ ಜಾನುವಾರು ಬಲಿ; ಬೆಂಗಳೂರು ಸೇರಿ ಹಲವೆಡೆ ಭಾರಿ ಮಳೆ

Karnataka Rain
ಮಳೆ4 days ago

Karnataka Rain: ಧಾರಾಕಾರ ಮಳೆಗೆ ಕಾಂಪೌಂಡ್ ಕುಸಿದು 4 ಬೈಕ್‌ಗಳು ಜಖಂ; ಮದುವೆ ಮಂಟಪಕ್ಕೆ ನುಗ್ಗಿದ ನೀರು‌

Prajwal Revanna Case JDS calls CD Shivakumar pen drive gang
ರಾಜಕೀಯ6 days ago

Prajwal Revanna Case: CD ಶಿವಕುಮಾರ್ ಪೆನ್ ಡ್ರೈವ್ ಗ್ಯಾಂಗ್ ಎಂದ ಕುಟುಕಿದ ಜೆಡಿಎಸ್‌!

ಟ್ರೆಂಡಿಂಗ್‌