Uday Kiran: ದಿವಂಗತ ನಟ ಉದಯ್ ಕಿರಣ್ ಬ್ಲಾಕ್‌ಬಸ್ಟರ್‌ ಹಿಟ್‌ ಸಿನಿಮಾ ರಿ-ರಿಲೀಸ್‌! - Vistara News

ಟಾಲಿವುಡ್

Uday Kiran: ದಿವಂಗತ ನಟ ಉದಯ್ ಕಿರಣ್ ಬ್ಲಾಕ್‌ಬಸ್ಟರ್‌ ಹಿಟ್‌ ಸಿನಿಮಾ ರಿ-ರಿಲೀಸ್‌!

Uday Kiran: ಉದಯ್ ಕಿರಣ್ ದೈಹಿಕವಾಗಿ ಇಲ್ಲದೇ ಇದ್ದರೂ ಅವರ ನೆನಪು ಫ್ಯಾನ್ಸ್‌ಗೆ ಇದೆ. ಉದಯ್ ಕಿರಣ್ ಅಭಿನಯದ ಬ್ಲಾಕ್ ಬಸ್ಟರ್ ಸಿನಿಮಾ `ನುವ್ವು ನೇನು’ ಚಿತ್ರ ಮತ್ತೆ ರಿಲೀಸ್‌ ಆಗಿದೆ.

VISTARANEWS.COM


on

Uday Kiran
ಮಹತ್ವದ, ಕುತೂಹಲಕರ ಸುದ್ದಿಗಾಗಿ ಫಾಲೊ ಮಾಡಿ
Koo

ಬೆಂಗಳೂರು: 2001ರಲ್ಲಿ ದಿವಂಗತ ನಟ ಉದಯ್ ಕಿರಣ್ (Uday Kiran) ಅವರ ʻನುವ್ವು ನೇನುʼ (Nuvvu Nenu) ಮತ್ತು ʻಮನಸಂತ ನುವ್ವೆʼ ಸಿನಿಮಾಗಳು ತೆಲುಗು ಬಾಕ್ಸ್ ಆಫೀಸ್‌ನಲ್ಲಿ ಬ್ಲಾಕ್‌ಬಸ್ಟರ್ ಆಗಿದ್ದವು. ಆದರೆ 2014ರಲ್ಲಿ ನಟ ಉದಯ್ ಕಿರಣ್ ಬಾರದ ಲೋಕಕ್ಕೆ ಹೋಗೇ ಬಿಟ್ಟರು. ಉದಯ್ ಕಿರಣ್ ಇದ್ದಷ್ಟು ದಿನ ತಮ್ಮ ಹಾಡುಗಳು ಮತ್ತು ಸಿನಿಮಾಗಳ ಮೂಲಕ ತೆಲುಗು ಪ್ರೇಕ್ಷಕರನ್ನು ರಂಜಿಸುತ್ತಲೇ ಇದ್ದರು. ಇದೀಗ ನಟನ ಫ್ಯಾನ್ಸ್‌ಗೆ ಸಿಹಿ ಸುದ್ದಿಯೊಂದು ಇದೆ. ಹೀಗಾಗಿಯೇ ಉದಯ್ ಕಿರಣ್ ಅಭಿನಯದ ಬ್ಲಾಕ್ ಬಸ್ಟರ್ ಸಿನಿಮಾ `ನುವ್ವು ನೇನು’ ಚಿತ್ರಕ್ಕೆ ಹೊಸ ಸ್ಪರ್ಶವನ್ನ ನೀಡಲಾಗಿದೆ. ಇಂದು ಮರು ಬಿಡುಗಡೆ ಮಾಡಲಾಗಿದೆ.

ನುವ್ವು ನೇನು, ಚಿತ್ರಮ್, ಮನಸಂತ ನುವ್ವೆ, ನೀ ಸ್ನೇಹಮ್, ಕಲುಸುಕೋವಾಲನಿ, ನೀಕು ನೇನು ನಾಕು ನುವ್ವು, ಹೀಗೆ ಅನೇಕ ಬ್ಲಾಕ್ ಬಸ್ಟರ್ ಸಿನಿಮಾ ಕೊಟ್ಟ ಹೆಗ್ಗಳಿಕೆ ಹೊಂದಿರುವ ಉದಯ್ ಕಿರಣ್ ದೈಹಿಕವಾಗಿ ಇಲ್ಲದೇ ಇದ್ದರೂ ಅವರ ನೆನಪು ಫ್ಯಾನ್ಸ್‌ಗೆ ಇದೆ. ನುವ್ವು ನೇನು, ಉದಯ್ ಕಿರಣ್ ಅಭಿನಯಿಸಿದ್ದ ಎರಡನೇ ಸಿನಿಮಾ. 2001ರಲ್ಲಿ ತೆರೆಗೆ ಬಂದ ಈ ಚಿತ್ರಕ್ಕೆ ತೇಜಾ ನಿರ್ದೇಶನ ಇತ್ತು. ಇನ್ನೂ ಉದಯ್ ಕಿರಣ್ ಜತೆ ಈ ಚಿತ್ರದಲ್ಲಿ ನಾಯಕಿಯಾಗಿ ಅನಿತಾ ಕಾಣಿಸಿಕೊಂಡಿದ್ದರು.

ಇದನ್ನೂ ಓದಿ: Actor Ravichandran: ಮಹಿಳಾ ಪ್ರಧಾನ ಸಿನಿಮಾದಲ್ಲಿ ಕ್ರೇಜಿಸ್ಟಾರ್ ವಿ.ರವಿಚಂದ್ರನ್!

ತೆಲುಗು ರಾಜ್ಯಗಳಾದ ತೆಲಂಗಾಣ ಮತ್ತು ಆಂಧ್ರಪ್ರದೇಶದಲ್ಲಿ ಹಲವಾರು ಚಿತ್ರಮಂದಿರಗಳಲ್ಲಿ ಮರು-ಬಿಡುಗಡೆಯಾಗಿದ್ದರೂ, ಚಿತ್ರಕ್ಕೆ ಪ್ರತಿಕ್ರಿಯೆ ಅಷ್ಟೇನೂ ಇಲ್ಲ ಎಂದೂ ವರದಿಯಾಗಿದೆ. ಇದು ಸಾಮಾಜಿಕ ಜಾಲತಾಣಗಳಲ್ಲಿ ಚರ್ಚೆಗೆ ಗ್ರಾಸವಾಗಿದೆ. ಮರು ಬಿಡುಗಡೆಗೆ ಬಗ್ಗೆ ಸರಿಯಾದ ಪ್ರಚಾರ ಸಿಗದಿರುವುದು ಸಿನಿಮಾಗೆ ಹಿನ್ನೆಡೆ ಎನಿಸುತ್ತಿದೆ ಎಂದು ಪ್ರೇಕ್ಷಕರು ಕಮೆಂಟ್‌ ಮಾಡಿದ್ದಾರೆ.

ಕೆಲವು ಗ್ರಾಮಾಂತರ ಜಿಲ್ಲೆಗಳಲ್ಲಿ ಸೀಮಿತ ಚಿತ್ರಮಂದಿರಗಳಲ್ಲಿ ನೀನುʻನುವ್ವು ನೇನುʼ ಪ್ರದರ್ಶನವಾಗುತ್ತಿದೆ. ಮುಂದಿನ ದಿನಗಳಲ್ಲಿ ಉದಯ್ ಕಿರಣ್ ಅವರ ಇನ್ನೂ ಕೆಲವು ಸಿನಿಮಾಗಳು ರೀ ರಿಲೀಸ್ ಆಗುವ ಸಾಧ್ಯತೆಗಳಿವೆ.ಚಿರಂಜೀವಿ ಅವರ ಮಗಳೊಂದಿಗಿನ ಉದಯ್‌ ಕಿರಣ್‌ ವಿವಾಹ ಆಗಬೇಕಿತ್ತು. ಕಾರಣಾಂತರಗಳಿಂದ ಈ ಮದುವೆ ರದ್ದಾಯಿತು. ಇದರಿಂದ ಉದಯ್‌ ಅವರು ಖಿನ್ನತೆಗೆ ಒಳಗಾಗಿ ಆತ್ಮಹತ್ಯೆ ಮಾಡಿಕೊಂಡರು ಎಂಬ ವರದಿಗಳೂ ಇವೆ.

ಕ್ಷಣ ಕ್ಷಣದ ಮಾಹಿತಿಗಾಗಿ Vistara News FaceBook ಪೇಜ್ ಫಾಲೋ ಮಾಡಿ
ಮಹತ್ವದ ಮಾಹಿತಿಗಾಗಿ ವಿಸ್ತಾರ ನ್ಯೂಸ್ ಆ್ಯಪ್ ಉಚಿತವಾಗಿ ಡೌನ್ ಲೋಡ್ ಮಾಡಿಕೊಳ್ಳಿ: Andriod App | IOS App
Continue Reading
Click to comment

Leave a Reply

Your email address will not be published. Required fields are marked *

ಟಾಲಿವುಡ್

Rashmika Mandanna: ಸಲ್ಮಾನ್ ಖಾನ್ ಜತೆ ನ್ಯಾಷನಲ್‌ ಕ್ರಶ್‌ ರಶ್ಮಿಕಾ ರೊಮ್ಯಾನ್ಸ್‌!

Rashmika Mandanna: ಈದ್ ದಿನವೇ ಫ್ಯಾನ್ಸ್‌ಗೆ ಗುಡ್‌ ನ್ಯೂಸ್‌ ಕೊಟ್ಟಿದ್ದರು ಸಲ್ಮಾನ್ ಖಾನ್ (Salman Khan).ಎಆರ್ ಮುರುಗದಾಸ್ (AR Murugadoss) ಜತೆ ಸಲ್ಮಾನ್ ಖಾನ್ ಕೈ ಜೋಡಿಸಿದ್ದು, ಹೊಸ ಸಿನಿಮಾ ಅನೌನ್ಸ್‌ ಮಾಡಿದ್ದರು. ಮಾರ್ಚ್ 12ರಂದು, ಸಲ್ಮಾನ್ ಖಾನ್ ತಮ್ಮ ಅಧಿಕೃತ ಎಕ್ಸ್‌ ಹ್ಯಾಂಡಲ್‌ನಲ್ಲಿ ಸಿನಿಮಾ ಬಗ್ಗೆ ಹಂಚಿಕೊಂಡಿದ್ದರು. ಪ್ರತಿಭಾವಂತರಾದ ಎಆರ್ ಮುರುಗದಾಸ್ ನನ್ನ ಸ್ನೇಹಿತ, ಅವರೊಂದಿಗೆ ಸಿನಿಮಾ ಮಾಡುತ್ತಿರುವುದು ಸಂತೋಷವಾಗಿದೆ. ಈ ಸಹಯೋಗ ವಿಶೇಷವಾಗಿದೆ. ನಿಮ್ಮ ಪ್ರೀತಿ ಮತ್ತು ಆಶೀರ್ವಾದ ನಮ್ಮ ಮೇಲೆ ಇರಲಿʼʼಎಂದು ಬರೆದುಕೊಂಡಿದ್ದರು.

VISTARANEWS.COM


on

Rashmika Mandanna Signed Salman Khan Sikandar
Koo

ಬೆಂಗಳೂರು: ನಟಿ ರಶ್ಮಿಕಾ ಮಂದಣ್ಣ (Rashmika Mandanna) ಅವರು ಸಲ್ಮಾನ್ ಖಾನ್ (Salman Khan) ಅವರ ಹೊಸ ಪ್ರಾಜೆಕ್ಟ್ ʻಸಿಕಂದರ್ʼ ಸಿನಿಮಾದಲ್ಲಿ ನಾಯಕಿಯಾಗಿ ಮಿಂಚಲಿದ್ದಾರೆ. ಇದು ರಶ್ಮಿಕಾ ಅವರ ನಾಲ್ಕನೇ ಬಾಲಿವುಡ್ ಚಿತ್ರ. ಈ ಚಿತ್ರವನ್ನು ಎ.ಆರ್. ಮುರುಗದಾಸ್ ನಿರ್ದೇಶನ ಮಾಡುತ್ತಿದ್ದಾರೆ.

ಈ ಸುದ್ದಿಯನ್ನು ರಶ್ಮಿಕಾ ಮಂದಣ್ಣ ಮೇ.8ರಂದು ಇನ್‌ಸ್ಟಾ ಮೂಲಕ ಖಚಿತಪಡಿಸಿದ್ದಾರೆ. “ನೀವು ಬಹಳ ಸಮಯದಿಂದ ಮುಂದಿನ ಅಪ್‌ಡೇಟ್‌ ಬಗ್ಗೆ ನನ್ನನ್ನು ಕೇಳುತ್ತಿದ್ದೀರಿ. ಇದೀಗ ನಿಮ್ಮ ಮುಂದೆ. ʻಸಿಕಂದರ್‌ ಸಿನಿಮಾ ಭಾಗವಾಗಿರುವುದಕ್ಕೆ ನಾನು ನಿಜವಾಗಿಯೂ ಕೃತಜ್ಞನಾಗಿದ್ದೇನೆ ಮತ್ತು ಗೌರವಿಸುತ್ತೇನೆʼʼಎಂದು ಇನ್‌ಸ್ಟಾದಲ್ಲಿ ಬರೆದುಕೊಂಡಿದ್ದಾರೆ ರಶ್ಮಿಕಾ. ಚಿತ್ರದಲ್ಲಿ ರಶ್ಮಿಕಾ ಪ್ರಮುಖ ಪಾತ್ರವನ್ನು ನಿರ್ವಹಿಸಲಿದ್ದಾರೆ ಎಂದು ವರದಿಯಾಗಿದೆ.

ಈದ್ ದಿನವೇ ಫ್ಯಾನ್ಸ್‌ಗೆ ಗುಡ್‌ ನ್ಯೂಸ್‌ ಕೊಟ್ಟಿದ್ದರು ಸಲ್ಮಾನ್ ಖಾನ್ (Salman Khan).ಎಆರ್ ಮುರುಗದಾಸ್ (AR Murugadoss) ಜತೆ ಸಲ್ಮಾನ್ ಖಾನ್ ಕೈ ಜೋಡಿಸಿದ್ದು, ಹೊಸ ಸಿನಿಮಾ ಅನೌನ್ಸ್‌ ಮಾಡಿದ್ದರು. ಮಾರ್ಚ್ 12ರಂದು, ಸಲ್ಮಾನ್ ಖಾನ್ ತಮ್ಮ ಅಧಿಕೃತ ಎಕ್ಸ್‌ ಹ್ಯಾಂಡಲ್‌ನಲ್ಲಿ ಸಿನಿಮಾ ಬಗ್ಗೆ ಹಂಚಿಕೊಂಡಿದ್ದರು. ಪ್ರತಿಭಾವಂತರಾದ ಎಆರ್ ಮುರುಗದಾಸ್ ನನ್ನ ಸ್ನೇಹಿತ, ಅವರೊಂದಿಗೆ ಸಿನಿಮಾ ಮಾಡುತ್ತಿರುವುದು ಸಂತೋಷವಾಗಿದೆ. ಈ ಸಹಯೋಗ ವಿಶೇಷವಾಗಿದೆ. ನಿಮ್ಮ ಪ್ರೀತಿ ಮತ್ತು ಆಶೀರ್ವಾದ ನಮ್ಮ ಮೇಲೆ ಇರಲಿʼʼಎಂದು ಬರೆದುಕೊಂಡಿದ್ದರು.

ಇದನ್ನೂ ಓದಿ: Rashmika Mandanna: ನ್ಯಾಶನಲ್‌ ಕ್ರಶ್‌ ರಶ್ಮಿಕಾ ಮಂದಣ್ಣ ತಂಗಿ ಈಗ ಹೇಗಿದ್ದಾರೆ?

ತಮಿಳು, ತೆಲುಗಿನಲ್ಲಿ ಹಲವು ಸೂಪರ್ ಹಿಟ್ ಸಿನಿಮಾಗಳನ್ನು ನೀಡಿರುವ ಎಆರ್ ಮುರುಗದಾಸ್ ಈ ಚಿತ್ರವನ್ನು ನಿರ್ದೇಶನ ಮಾಡುತ್ತಿದ್ದಾರೆ. ಈ ಚಿತ್ರವನ್ನು ಸಾಜಿದ್ ನಾಡಿಯಾವಾಲ ನಿರ್ಮಾಣ ಮಾಡುತ್ತಿದ್ದು, ದೊಡ್ಡ ಬಜೆಟ್​ನಲ್ಲಿ ಸಿದ್ಧವಾಗುತ್ತಿದೆ. ಮುರುಗದಾಸ್ ಅವರು ಈ ಮೊದಲು ‘ಗಜಿನಿ’, ‘ಸ್ಟಾಲಿನ್’, ‘ಸೆವೆಂತ್ ಸೆನ್ಸ್’, ‘ತುಪ್ಪಾಕಿ’, ‘ಸ್ಪೈಡರ್’ ಸೇರಿ ಹಲವು ಸೂಪರ್ ಹಿಟ್ ಸಿನಿಮಾಗಳನ್ನು ಕೊಟ್ಟಿದ್ದರು. ಮುರುಗದಾಸ್ ಅವರು ಆಮಿರ್ ಖಾನ್ ನಟಿಸಿದ್ದ ‘ಗಜಿನಿ’ ಚಿತ್ರವನ್ನು ಅವರೇ ನಿರ್ದೇಶನ ಮಾಡಿದ್ದರು.

ಸೊನಾಕ್ಷಿ ಸಿನ್ಹಾ ನಟನೆಯ ‘ಅಕಿರಾ’ ಚಿತ್ರವನ್ನು ಅವರು ನಿರ್ದೇಶನ ಮಾಡಿದ್ದರು. ಮುರುಗದಾಸ್ ನಿರ್ದೇಶನದಲ್ಲಿ ಮೂಡಿ ಬಂದಿದ್ದ ‘ಸ್ಟಾಲಿನ್’ ಚಿತ್ರವನ್ನು ಹಿಂದಿಯಲ್ಲಿ ‘ಜೈ ಹೋ’ ಹೆಸರಲ್ಲಿ ರೀಮೇಕ್ ಮಾಡಲಾಗಿತ್ತು.

ʻಸಿಖಂದರ್’ ಸಿನಿಮಾ ಆಕ್ಷನ್ ಥ್ರಿಲ್ಲರ್ ಚಿತ್ರವಾಗಿರಲಿದೆ. 400 ಕೋಟಿ ರೂಪಾಯಿ ಬಜೆಟ್​ನಲ್ಲಿ ಸಿನಿಮಾ ಸಿದ್ಧವಾಗುತ್ತಿದೆ ಎಂದು ವರದಿಯಾಗಿದೆ. ಸಲ್ಮಾನ್ ಖಾನ್ ಕೊನೆಯದಾಗಿ ‘ಟೈಗರ್ 3’ ಚಿತ್ರದಲ್ಲಿ ಕಾಣಿಸಿಕೊಂಡಿದ್ದರು.

ರಶ್ಮಿಕಾ ಮುಂದೆ ಪುಷ್ಪಾ 2 ಸಿನಿಮಾದಲ್ಲಿ ಕಾಣಿಸಿಕೊಳ್ಳಲಿದ್ದಾರೆ. ಚಿತ್ರದಲ್ಲಿ ಅಲ್ಲು ಅರ್ಜುನ್ ಮತ್ತು ಫಹಾದ್ ಫಾಸಿಲ್ ಪ್ರಮುಖ ಪಾತ್ರಗಳಲ್ಲಿ ಕಾಣಿಸಿಕೊಳ್ಳಲಿದ್ದಾರೆ. ಆಗಸ್ಟ್ 15ರಂದು ಸಿನಿಮಾ ಬಿಡುಗಡೆಯಾಗಲಿದೆ.

Continue Reading

ಟಾಲಿವುಡ್

Samantha Ruth Prabhu: ಬೆತ್ತಲೆ ಫೋಟೊ ಅಪ್​ಲೋಡ್ ಮಾಡಿದ್ರಾ ಸಮಂತಾ?

Samantha Ruth Prabhu: ಇತ್ತೀಚೆಗಷ್ಟೇ ಸಮಂತಾ ತಮ್ಮ ಇನ್‌ಸ್ಟಾಗ್ರಾಂನಲ್ಲಿ ‘ಫಾರ್ ಇನ್‌ಫ್ರಾರೆಡ್ ಸೌನಾ'(Far Infrared Sauna) ಉಪಯೋಗಗಳು ಎಂದು ಬರೆದು ಅರೆಬೆತ್ತಲೆ ಇರುವ ಫೋಟೊ ಶೇರ್‌ ಮಾಡಿಕೊಂಡಿದ್ದರು. ಯುವತಿ ಸಂಪೂರ್ಣ ಬೆತ್ತಲಾಗಿ ಬಾತ್‌ಟಬ್‌ನಲ್ಲಿ ಕುಳಿತಿರುವಂತೆ ಫೋಟೊ ವೈರಲ್ ಆಗುತ್ತಿದೆ. ಆದರೆ ಮುಖ ಮಾತ್ರ ಕಾಣುತ್ತಿರಲಿಲ್ಲ. .ಖುದ್ದು ಸಮಂತಾ ಈ ಫೋಟೊ ಹಾಕಿ ಡಿಲೀಟ್ ಮಾಡಿದ್ದಾರೆ ಎಂದು ಕೆಲವರು ವೈರಲ್ ಮಾಡುತ್ತಿದ್ದಾರೆ.

VISTARANEWS.COM


on

Samantha Ruth Prabhu Fake Viral Nude Pic
Koo

ಬೆಂಗಳೂರು: ಸಮಂತಾ (Samantha Ruth Prabhu) ಮಯೋಸಿಟಿಸ್‌ ಕಾಯಿಲೆಯಿಂದ ಬಳಲುತ್ತಿರುವುದು ಗೊತ್ತೇ ಇದೆ. ಸಮಂತಾ ವಿವಿಧ ರೀತಿಯ ಆರೋಗ್ಯ ಸಮಸ್ಯೆಗಳಿಗೆ ಚಿಕಿತ್ಸೆ ಬಗ್ಗೆ ಮಾಹಿತಿ ನೀಡುತ್ತಾರೆ. ಈ ಬಗ್ಗೆ ಪಾಡ್‌ಕಾಸ್ಟ್‌ ನಡೆಸುತ್ತಾರೆ. ಈ ಮಧ್ಯೆ ಸಮಂತಾ ಅರೆಬೆತ್ತಲೆ ಫೋಟೊ ಒಂದು ವೈರಲ್ ಆಗಿದೆ. ಸಮಂತಾ ಇನ್​ಸ್ಟಾಗ್ರಾಮ್ ಸ್ಟೇಟಸ್​ಗೆ ಹಾಕಿ ನಂತರ ಡಿಲೀಟ್ ಮಾಡಿದ್ದಾರೆ ಎಂದು ಕೆಲವರು ಹೇಳಿದ್ದಾರೆ. ಆದರೆ ಈ ಫೋಟೊ ನಕಲಿ ಎಂದು ಹೇಳಲಾಗುತ್ತಿದೆ.

ಇತ್ತೀಚೆಗಷ್ಟೇ ಸಮಂತಾ ತಮ್ಮ ಇನ್‌ಸ್ಟಾಗ್ರಾಂನಲ್ಲಿ ‘ಫಾರ್ ಇನ್‌ಫ್ರಾರೆಡ್ ಸೌನಾ'(Far Infrared Sauna) ಉಪಯೋಗಗಳು ಎಂದು ಬರೆದು ಫೋಟೊ ಹೀಗೆ ಮುಂತಾದ ವಿವಿಧ ಉದ್ದೇಶಗಳಿಗಾಗಿ ಜನರು ಬಾತ್‌ ಟಬ್‌ನಲ್ಲಿ ಸ್ವಲ್ಪ ಸಮಯ ಇರುತ್ತಾರೆ ಎಂದು ಬರೆದುಕೊಂಡಿದ್ದಾರೆ. ಆದರೆ ಈ ಫೋಟೊ ಜತಗೆ ಸಮಂತಾ ಸಂಪೂರ್ಣ ಬೆತ್ತಲಾಗಿರುವ ಫೋಟೊ ಪೋಸ್ಟ್ ಮಾಡಿ ಕೂಡಲೇ ಡಿಲೀಟ್ ಮಾಡಿದ್ದಾರೆ ಎನ್ನುವ ಚರ್ಚೆ ಶುರುವಾಗಿದೆ.

ಯುವತಿ ಸಂಪೂರ್ಣ ಬೆತ್ತಲಾಗಿ ಬಾತ್‌ಟಬ್‌ನಲ್ಲಿ ಕುಳಿತಿರುವಂತೆ ಫೋಟೊ ವೈರಲ್ ಆಗುತ್ತಿದೆ. ಆದರೆ ಮುಖ ಮಾತ್ರ ಕಾಣುತ್ತಿರಲಿಲ್ಲ. .ಖುದ್ದು ಸಮಂತಾ ಈ ಫೋಟೊ ಹಾಕಿ ಡಿಲೀಟ್ ಮಾಡಿದ್ದಾರೆ ಎಂದು ಕೆಲವರು ವೈರಲ್ ಮಾಡುತ್ತಿದ್ದಾರೆ. ಆದರೆ ಇದೆಲ್ಲಾ ಸುಳ್ಳು. ಆಕೆಯ ಅಂತಹ ಯಾವುದೇ ಫೋಟೊ ಪೋಸ್ಟ್ ಮಾಡಿಲ್ಲ. ಕಿಡಿಗೇಡಿಗಳು ಈ ರೀತಿ ಫೋಟೊ ವೈರಲ್ ಮಾಡುತ್ತಿದ್ದಾರೆ ಎನ್ನುವ ಚರ್ಚೆಯೂ ನಡೀತಿದೆ.

ಈ ಬಗ್ಗೆ ಟ್ವಟರ್‌ನಲ್ಲಿ ಭಾರಿ ಚರ್ಚೆಗಳು ಆಗುತ್ತಿದೆ. “ದಯವಿಟ್ಟು ಈ ರೀತಿಯ ಚಟುವಟಿಕೆಗಳನ್ನು ಮಾಡುವ ಮೂಲಕ ನಿಮ್ಮ ಮೆಚ್ಚಿನ ನಟಿಯ ಹೆಸರನ್ನು ಹಾಳು ಮಾಡಬೇಡಿ! ಅವರೂಕೂ ಮಹಿಳೆ. ಅಗೌರವ ಮಾಡಬೇಡಿʼʼಎಂದು ಕಮೆಂಟ್‌ ಮಾಡುತ್ತಿದ್ದಾರೆ. ʻʻನಾವೆಲ್ಲರೂ ನಿಮ್ಮೊಂದಿಗೆ ನಿಲ್ಲುತ್ತೇವೆʼʼಎಂದು ನಟಿಗೆ ಸಾಥ್‌ ಕೊಟ್ಟಿದ್ದಾರೆ. ಈ ಪೋಸ್ಟ್ ಬಗ್ಗೆ ಸಮಂತಾ ಇನ್ನೂ ಪ್ರತಿಕ್ರಿಯಿಸಿಲ್ಲ.

ಇದನ್ನೂ ಓದಿ: Urfi Javed: ಉರ್ಫಿ ʻಮ್ಯಾಜಿಕ್ʼ ಡ್ರೆಸ್‌ಗೆ ಸಮಂತಾ ಮೆಚ್ಚುಗೆ; ಗೌನ್‌ನಿಂದ ಹಾರಿತು ಬಣ್ಣದ ಚಿಟ್ಟೆ!

ನಟಿ ಇತ್ತೀಚೆಗೆ ತಮ್ಮ 37 ನೇ ಹುಟ್ಟುಹಬ್ಬವನ್ನು ಆಚರಿಸಿಕೊಂಡರು. ತನ್ನ ಆತ್ಮೀಯ ಸ್ನೇಹಿತರೊಂದಿಗೆ ಅಥೆನ್ಸ್‌ನಲ್ಲಿ ಭರ್ಜರಿಯಾಗಿ ಜನುಮದಿನ ಆಚರಿಸಿಕೊಂಡರು. ಈ ಸಂದರ್ಭದಲ್ಲಿ ʻಬಂಗಾರಂʼ ಸಿನಿಮಾವನ್ನು ನಿರ್ಮಿಸಿ ನಟಿಸಲಿದ್ದೇನೆ ಎಂದು ಅವರು ಬಹಿರಂಗಪಡಿಸಿದ್ದಾರೆ.

ತೆಲುಗು ಚಿತ್ರರಂಗದಲ್ಲಿ ಸಾಕಷ್ಟು ಹೆಸರು ಮಾಡಿದ ನಟಿ ಸಮಂತಾ ಯೋಗ, ಧ್ಯಾನ, ಕುದುರೆ ಸವಾರಿ ಮತ್ತು ಕಿಕ್ ಬಾಕ್ಸಿಂಗ್ ಕಡೆಗೆ ಗಮನಹರಿಸುತ್ತಿದ್ದಾರೆ. ತಾವು ಕಲಿತ ಸಮರ ಕಲೆಗಳ ಪ್ರದರ್ಶನದ ವಿಡಿಯೊಗಳನ್ನು ಇನ್‌ಸ್ಟಾಗ್ರಾಮ್‌ನಲ್ಲಿ ಹಂಚಿಕೊಂಡಿರುವ ನಟಿ ಸಮಂತಾ (Samantha Kickboxing) ಇದಕ್ಕೆ ‘ಒನ್ ಡೇ ಎಟ್ ಅ ಟೈಮ್ ‘ ಎಂಬ ಶೀರ್ಷಿಕೆ ನೀಡಿದ್ದಾರೆ.

ನಟಿ ಸಮಂತಾ ನಟನಾ ವೃತ್ತಿಗೆ ವಿದಾಯ ಹೇಳಿಲ್ಲ, ಬದಲಾಗಿ ಸ್ವಲ್ಪ ವಿರಾಮ ತೆಗೆದುಕೊಂಡಿದ್ದಾರೆ ಅಷ್ಟೇ. ನಟಿ ಈಗಾಗಲೇ ʻಸಿಟಾಡೆಲ್ ಇಂಡಿಯಾ: ಹನಿ ಬನ್ನಿʼ ವೆಬ್ ಸರಣಿಯಲ್ಲಿ ನಟಿಸಿದ್ದು ಅದರ ಬಿಡುಗಡೆಗಾಗಿ ಕಾಯುತ್ತಿದ್ದಾರೆ. ಇದರಲ್ಲಿ ಸಮಂತಾ ಜತೆ ವರುಣ್ ಧವನ್ ಪ್ರಮುಖ ಪಾತ್ರದಲ್ಲಿ ನಟಿಸಿದ್ದಾರೆ. ಜತೆಗೆ ಸಿಕಂದರ್ ಖೇರ್, ಸಾಕಿಬ್ ಸಲೀಮ್ ಮತ್ತು ಕೇ ಕೇ ಮೆನನ್ ಪೋಷಕ ಪಾತ್ರಗಳನ್ನು ನಿರ್ವಹಿಸಿದ್ದಾರೆ.

Continue Reading

ಟಾಲಿವುಡ್

Bandaru Supritha Naidu: ವಿಜಯ್‌ದೇವರಕೊಂಡರನ್ನು ಮದುವೆಯಾಗುತ್ತಿದ್ದಾರಂತೆ ತೆಲುಗು ಖ್ಯಾತ ನಟಿಯ ಮಗಳು!

Bandaru Supritha Naidu: ಸುರೇಖಾ ವಾಣಿ ಅವರ ಪುತ್ರಿ ಸುಪ್ರಿತಾ ತೆಲುಗು ಮಂದಿಗೆ ಚಿರಪರಿಚಿತ. ಇತ್ತೀಚೆಗೆ ತನ್ನ ಇನ್‌ಸ್ಟಾಗ್ರಾಂ ಖಾತೆಯ ಮೂಲಕ ಲೈವ್‌ಗೆ ಬಂದಿದ್ದರು.ಈ ವೇಳೆ ನೀವು ಯಾವ ಅವಿವಾಹಿತ ಹೀರೊನಾ ಮದುವೆ ಆಗಲು ಬಯಸುತ್ತೀರಾ? ಎಂದು ಪ್ರಶ್ನೆ ಮಾಡಿದ್ದರು. ನಟಿಯ ಉತ್ತರಕ್ಕೆ ನೆಟ್ಟಿಗರು ಶಾಕ್‌ ಆಗಿದ್ದಾರೆ.

VISTARANEWS.COM


on

Bandaru Supritha Naidu surekha vani daughter wants to marry vijay deverakonda
Koo

ತೆಲುಗಿನ ಹಿರಿಯ ನಟಿ ಸುರೇಖಾ ವಾಣಿ ಅವರ ಪುತ್ರಿ ಸುಪ್ರಿತಾ (Bandaru Supritha Naidu) ಹೆಸರು ವಿಜಯ್ ದೇವರಕೊಂಡ ಜತೆ ಕೇಳಿಬರುತ್ತಿದೆ.

ಸುರೇಖಾ ವಾಣಿ ಅವರ ಪುತ್ರಿ ಸುಪ್ರಿತಾ ತೆಲುಗು ಮಂದಿಗೆ ಚಿರಪರಿಚಿತ. ಇತ್ತೀಚೆಗೆ ತನ್ನ ಇನ್‌ಸ್ಟಾಗ್ರಾಂ ಖಾತೆಯ ಮೂಲಕ ಲೈವ್‌ಗೆ ಬಂದಿದ್ದರು. ತಮ್ಮನ್ನು ಫಾಲೋ ಮಾಡುವವರಿಗೆ ನಿಮ್ಮಲ್ಲಿ ಏನಾದರೂ ಪ್ರಶ್ನೆಗಳಿದ್ದರೆ ಕೇಳಿ ಎಂದಿದ್ದರು. ಈ ವೇಳೆ ನೆಟ್ಟಿಗರು ಪ್ರಶ್ನೆಗಳನ್ನು ಕೇಳಿದ್ದರು.

ಈ ವೇಳೆ ನೀವು ಯಾವ ಅವಿವಾಹಿತ ಹೀರೊನಾ ಮದುವೆ ಆಗಲು ಬಯಸುತ್ತೀರಾ? ಎಂದು ಪ್ರಶ್ನೆ ಮಾಡಿದ್ದರು.ಈ ಪ್ರಶ್ನೆಗೆ ಸುಪ್ರಿತಾ ವಿಜಯ್ ದೇವರಕೊಂಡ ಎಂದು ಹೇಳಿದ್ದಾರೆ. ವಿಜಯ್ ದೇವರಕೊಂಡ ಅವರ ಫೋಟೊವನ್ನು ಕೂಡ ಶೇರ್ ಮಾಡಿಕೊಂಡಿದ್ದರು.

ಇದನ್ನೂ ಓದಿ: MI vs KKR: ಮತ್ತೆ ಮುಂಬೈ ವಿರುದ್ಧ ಕೇಳಿಬಂದ ಟಾಸ್​ ಫಿಕ್ಸಿಂಗ್​ ಆರೋಪ

ಇದೀಗ ನೆಟ್ಟಿಗರು ವಿಜಯ್ ದೇವರಕೊಂಡ ಜೊತೆ ಸುಪ್ರಿತಾರನ್ನು ಮದುವೆ ಮಾಡಿಸುವುದಕ್ಕೆ ನಿಂತಿದ್ದಾರೆ.

ಅಮರ್ ದೀಪ್ ಚೌಧರಿ ನಾಯಕನಾಗಿ ನಟಿಸುತ್ತಿರುವ ಸಿನಿಮಾ ಮೂಲಕ ಸುಪ್ರಿತಾ ನಾಯಕಿಯಾಗಿ ಪರಿಚಯವಾಗುತ್ತಿದ್ದಾರೆ ಎಂದು ಹೇಳಲಾಗುತ್ತಿದೆ.

Continue Reading

ಟಾಲಿವುಡ್

Rashmika Mandanna: ನ್ಯಾಶನಲ್‌ ಕ್ರಶ್‌ ರಶ್ಮಿಕಾ ಮಂದಣ್ಣ ತಂಗಿ ಈಗ ಹೇಗಿದ್ದಾರೆ?

Rashmika Mandanna: ಬಹುಭಾಷಾ ನಟಿ ರಶ್ಮಿಕಾ ಮಂದಣ್ಣ (Rashmika Mandanna) ಸದ್ಯ ಬ್ಯುಸಿ ಕಲಾವಿದೆಯರಲ್ಲಿ ಒಬ್ಬರು. ವಿವಿಧ ಚಿತ್ರಗಳಲ್ಲಿ ಅವರು ನಟಿಸುತ್ತಿದ್ದಾರೆ. ಇದೀಗ ಸದ್ದಿಲ್ಲದೆ ತಮ್ಮ ನಾಲ್ಕನೇ ಹಿಂದಿ ಸಿನಿಮಾದ ಚಿತ್ರೀಕರಣ ಮುಗಿಸಿದ್ದಾರೆ. ಬಾಲಿವುಡ್‌ ನಟ ವಿಕ್ಕಿ ಕೌಶಲ್‌ (Vicky Kaushal) ಜತೆ ಅಭಿನಯಿಸುತ್ತಿರುವ ಮೊದಲ ಚಿತ್ರ ʼಛಾವಾʼ (Chhava)ದ ಶೂಟಿಂಗ್‌ ಅನ್ನು ರಶ್ಮಿಕಾ ಪೂರ್ಣಗೊಳಿಸಿದ್ದಾರೆ.

VISTARANEWS.COM


on

Rashmika Mandanna's younger sister Shiman
Koo

ಬೆಂಗಳೂರು: ಮೇ 2 ನಟಿ ರಶ್ಮಿಕಾ ಮಂದಣ್ಣ (Rashmika Mandanna) ಅವರ ತಂಗಿಗೆ ಜನುಮದಿನದ ಸಂಭ್ರಮ. ರಶ್ಮಿಕಾ ಮಂದಣ್ಣ ತಮ್ಮ ಇನ್‌ಸ್ಟಾಗ್ರಾಮ್ ಸ್ಟೋರಿಯಲ್ಲಿ ಸಹೋದರಿಯೊಂದಿಗೆ ಇರುವ ಕ್ಯೂಟ್‌ ಫೋಟೊವನ್ನು ಹಂಚಿಕೊಂಡಿದ್ದಾರೆ,. “ಇಂದು ನನ್ನ ತಂಗಿಯ ಜನ್ಮದಿನ. ಜನ್ಮದಿನದ ಶುಭಾಶಯಗಳು ನನ್ನ ಬೇಬಿ! ನಾನು ನಿನ್ನನ್ನು ತುಂಬಾ ಪ್ರೀತಿಸುತ್ತೇನೆʼʼಎಂದು ಕ್ಯಾಪ್ಷನ್‌ ಕೊಟ್ಟಿದ್ದಾರೆ. ಚಿತ್ರದಲ್ಲಿ, ರಶ್ಮಿಕಾ ಅವರು ತಂಗಿ ಶಿಮಾನ್ ಮಂದಣ್ಣ (Mandanna’s younger sister Shiman) ಕೆನ್ನೆಗೆ ಮುತ್ತು ಕೊಟ್ಟಿದ್ದಾರೆ. ಇದೀಗ ಶಿಮಾನ್ ಮಂದಣ್ಣ 11ನೇ ವಸಂತಕ್ಕೆ ಕಾಲಿಟ್ಟಿದ್ದಾರೆ.

ಶಿಮನ್’ಗಿಂತ ರಶ್ಮಿಕಾ ಸುಮಾರು 17 ವರ್ಷ ದೊಡ್ಡವರು. ರಶ್ಮಿಕಾ ಹಲವು ಸಂದರ್ಭಗಳಲ್ಲಿ ತಂಗಿಯ ಕುರಿತಾಗಿ ಹೇಳಿದ್ದೂ ಇದೆ. ʻʻನನ್ನ ತಂಗಿ ವಿಚಾರದಲ್ಲಿ ನನಗೆ ಜವಾಬ್ದಾರಿ ಹೆಚ್ಚಿಗೆ ಇದೆ. ಆಕೆ ಸದಾ ಖುಷಿಯಾಗಿ ಇರಬೇಕು ಸುರಕ್ಷಿತವಾಗಿ ಇರಬೇಕು. ಪ್ರತಿಯೊಬ್ಬ ಅಕ್ಕಂದಿರು ಇಷ್ಟ ಪಡುವಂತೆ ನನಗೂ ಆಕೆ ಚೆನ್ನಾಗಿ ಓದಬೇಕು ಎನ್ನುವ ಆಸೆ ತುಂಬಾ ಇದೆʼʼಎಂದು ಹೇಳಿಕೊಂಡಿದ್ದರು.

ಬಹುಭಾಷಾ ನಟಿ ರಶ್ಮಿಕಾ ಮಂದಣ್ಣ (Rashmika Mandanna) ಸದ್ಯ ಬ್ಯುಸಿ ಕಲಾವಿದೆಯರಲ್ಲಿ ಒಬ್ಬರು. ವಿವಿಧ ಚಿತ್ರಗಳಲ್ಲಿ ಅವರು ನಟಿಸುತ್ತಿದ್ದಾರೆ. ಇದೀಗ ಸದ್ದಿಲ್ಲದೆ ತಮ್ಮ ನಾಲ್ಕನೇ ಹಿಂದಿ ಸಿನಿಮಾದ ಚಿತ್ರೀಕರಣ ಮುಗಿಸಿದ್ದಾರೆ. ಬಾಲಿವುಡ್‌ ನಟ ವಿಕ್ಕಿ ಕೌಶಲ್‌ (Vicky Kaushal) ಜತೆ ಅಭಿನಯಿಸುತ್ತಿರುವ ಮೊದಲ ಚಿತ್ರ ʼಛಾವಾʼ (Chhava)ದ ಶೂಟಿಂಗ್‌ ಅನ್ನು ರಶ್ಮಿಕಾ ಪೂರ್ಣಗೊಳಿಸಿದ್ದಾರೆ.

ಇದನ್ನೂ ಓದಿ: Rashmika Mandanna: ಪುಷ್ಪ 2ನಲ್ಲಿ ಶ್ರೀವಲ್ಲಿ 2.0 ಲೆವೆಲ್‌ಗೆ ಇದ್ದಾಳಂತೆ! ರಶ್ಮಿಕಾ ಹೇಳಿದ್ದೇನು?

ಹಿಂದಿ ಮತ್ತು ಮರಾಠಿ ಚಿತ್ರಗಳನ್ನು ನಿರ್ದೇಶಿಸಿರುವ ಲಕ್ಷ್ಮಣ್‌ ಉಟೇಕರ್ ಆ್ಯಕ್ಷನ್‌ ಕಟ್‌ ಹೇಳುತ್ತಿರುವ ಐತಿಹಾಸಿಕ ಚಿತ್ರ ʼಛಾವಾʼ. ಈ ಮೂಲಕ ಅವರು ಮರಾಠ ಯೋಧ ಛತ್ರಪತಿ ಸಂಭಾಜಿ ಮಹಾರಾಜ್ ಅವರ ಕಥೆಯನ್ನು ತೆರೆ ಮೇಲೆ ತರುತ್ತಿದ್ದಾರೆ. ಛತ್ರಪತಿ ಸಂಭಾಜಿ ಮಹಾರಾಜ್ ಪಾತ್ರದಲ್ಲಿ ವಿಕ್ಕಿ ಕೌಶಲ್‌ ನಟಿಸುತ್ತಿದ್ದು, ಅವರ ಪತ್ನಿ ಯೇಸುಬಾಯಿಯಾಗಿ ರಶ್ಮಿಕಾ ಕಾಣಿಸಿಕೊಳ್ಳುತ್ತಿದ್ದಾರೆ. ಮೊದಲ ಬಾರಿ ರಶ್ಮಿಕಾ ಐತಿಹಾಸಿಕ ಚಿತ್ರವೊಂದರ ಭಾಗವಾಗುತ್ತಿದ್ದಾರೆ.

ಸೂಪರ್ ಸ್ಟಾರ್ ಧನುಷ್ (Actor Dhanush) ಅವರ ʻಡಿ 51ʼ ಸಿನಿಮಾ ಟೈಟಲ್‌ ರಿವೀಲ್‌ ಆಗಿದೆ. ತೆಲುಗು ನಿರ್ದೇಶಕ ಶೇಖರ್ ಕಮ್ಮುಲ ಆಕ್ಷನ್ ಕಟ್ ಹೇಳುತ್ತಿರುವ ಈ ಸಿನಿಮಾ ಪ್ಯಾನ್ ಇಂಡಿಯಾ ಮಟ್ಟದಲ್ಲಿ ತೆರೆಗೆ ಬರುತ್ತಿದೆ. ಕನ್ನಡಕ್ಕೂ ಡಬ್ ಆಗಿ ಬಿಡುಗಡೆ ಆಗಲಿದೆ. ಸದ್ಯ ಈ ಚಿತ್ರಕ್ಕೆ ‘ಕುಬೇರ’ ಎನ್ನುವ ಟೈಟಲ್ ಫಿಕ್ಸ್ ಆಗಿದೆ. ನಟ ಧನುಷ್ ಗಡ್ಡ ಬಿಟ್ಟು ನಗುತ್ತ ನೋಡುತ್ತಿರುವ ಪೋಸ್ಟರ್‌ ರಿಲೀಸ್ ಮಾಡಲಾಗಿದೆ. ಈ ಚಿತ್ರಕ್ಕೆ ರಶ್ಮಿಕಾ ನಾಯಕಿ.

ನಟಿ ರಶ್ಮಿಕಾ ಮಂದಣ್ಣ (Rashmika Mandanna) ‘ದಿ ಗರ್ಲ್‌ಫ್ರೆಂಡ್’ ಎಂಬ ರೋಮಾಂಚಕ ಪ್ರೇಮಕಥೆಯಲ್ಲಿ ನಾಯಕಿಯಾಗಿ ನಟಿಸಲು ಸಿದ್ಧರಾಗಿದ್ದಾರೆ. ಏಳು ವರ್ಷಗಳ ವೃತ್ತಿಜೀವನದಲ್ಲಿ ಇದು ನಟಿಯ 24ನೇ ಚಿತ್ರವಾಗಿದೆ. ‘ದಿ ಗರ್ಲ್‌ಫ್ರೆಂಡ್’ ರಶ್ಮಿಕಾ ಅವರ ಸೋಲೊ ಸಿನಿಮಾ ಎನ್ನಲಾಗಿದೆ. ಚಿತ್ರವನ್ನು ರಾಹುಲ್ ರವೀಂದ್ರನ್ ನಿರ್ದೇಶಿಸುತ್ತಿದ್ದಾರೆ. ಈ ಸಿನಿಮಾಗೆ ಕನ್ನಡದ ‘ದಿಯಾ’ ಚಿತ್ರದಲ್ಲಿ ನಟಿಸಿ ಗೆದ್ದಿದ್ದ ನಟ ದೀಕ್ಷಿತ್ ಶೆಟ್ಟಿ ಚಿತ್ರದಲ್ಲಿ ಹೀರೊ ಆಗಿ ನಟಿಸಿದ್ದಾರೆ. ಇತ್ತೀಚೆಗೆ ತೆಲುಗಿನ ‘ದಸರಾ’ ಚಿತ್ರದಲ್ಲಿ ದೀಕ್ಷಿತ್ ಶೆಟ್ಟಿ ನಟ ನಾನಿ ಸ್ನೇಹಿತನ ಪಾತ್ರದಲ್ಲಿ ಕಾಣಿಸಿಕೊಂಡಿದ್ದರು.

Continue Reading
Advertisement
7th Pay Commission
ನೌಕರರ ಕಾರ್ನರ್15 mins ago

7th Pay Commission: 7ನೇ ವೇತನ ಆಯೋಗ; ವರದಿ ಜಾರಿಯಾದ್ರೆ ರಾಜ್ಯ ಸರ್ಕಾರಿ ನೌಕರರ ವೇತನ ಎಷ್ಟು ಹೆಚ್ಚಲಿದೆ?

James Anderson
ಪ್ರಮುಖ ಸುದ್ದಿ19 mins ago

James Anderson : ಕೋಚ್ ಒತ್ತಡಕ್ಕೆ ಮಣಿದು ನಿವೃತ್ತಿ ಘೋಷಿಸಿದ ಇಂಗ್ಲೆಂಡ್​ ತಂಡ ವೇಗದ ಬೌಲರ್​

Sleeping tips
ಆರೋಗ್ಯ26 mins ago

Sleeping Tips: ನಿಮಗೆ ರಾತ್ರಿ ನಿದ್ದೆ ಬರುತ್ತಿಲ್ಲವೆ? ಮಲಗುವ ಮುನ್ನ ಈ ಪೇಯಗಳನ್ನು ಕುಡಿಯಿರಿ!

Lok Sabha Election
ದೇಶ27 mins ago

Lok Sabha Election: 3ನೇ ಹಂತದಲ್ಲಿ 65% ಮತದಾನ; ಕರ್ನಾಟಕದಲ್ಲಿ ಶೇ.71.84ರಷ್ಟು ಹಕ್ಕು ಚಲಾವಣೆ

Babar Azam
ಪ್ರಮುಖ ಸುದ್ದಿ44 mins ago

Babar Azam : ವಿರಾಟ್ ಕೊಹ್ಲಿಯ ದಾಖಲೆ ಸರಿಗಟ್ಟಿದ ಪಾಕ್​ ನಾಯಕ ಅಜಮ್​

Money Guide
ಮನಿ-ಗೈಡ್45 mins ago

Money Guide: ಮಹಿಳಾ ಸಮ್ಮಾನ್‌ ಸರ್ಟಿಫಿಕೆಟ್‌: ಈ ಅಮ್ಮಂದಿರ ದಿನ ನೀವು ನೀಡಬಹುದಾದ ಅತ್ಯುತ್ತಮ ಉಡುಗೊರೆ

Karnataka rain
ಮಳೆ57 mins ago

Karnataka Rain: ಶನಿವಾರ ಸಂಜೆ ಅಬ್ಬರಿಸಿದ ಗಾಳಿ ಮಳೆಗೆ ತೊಯ್ದು ತೊಪ್ಪೆಯಾದ ಮಂದಿ; ರಸ್ತೆಗೆ ಬಿದ್ದ ಮರಗಳು

IPL 2024
ಕ್ರೀಡೆ1 hour ago

IPL 2024 : ಗೆಲುವಿನ ನಡುವೆಯೂ ಬೇಸರ; ಶುಭ್​ಮನ್ ಗಿಲ್​ಗೆ 24 ಲಕ್ಷ ರೂಪಾಯಿ ದಂಡ

Arvind Kejriwal
ದೇಶ1 hour ago

ಮೋದಿಯಿಂದ ಯೋಗಿ ಆದಿತ್ಯನಾಥ್‌ ರಾಜಕೀಯ ಜೀವನ ಶೀಘ್ರದಲ್ಲೇ ಖತಂ; ಕೇಜ್ರಿವಾಲ್‌ ಸ್ಫೋಟಕ ಭವಿಷ್ಯ

Hair Color Fashion
ಫೋಟೊ1 hour ago

Hair Color Fashion: ವೈರಲ್‌ ಆದ ಹೇರ್‌ ಕಲರ್ ಸ್ಟೈಲ್‌

Sharmitha Gowda in bikini
ಕಿರುತೆರೆ7 months ago

Geetha Serial Kannada: ನಿದ್ದೆ ಕದ್ದ ಚೋರಿ! ನಟಿ `ಭಾನುಮತಿ’ ಹಾಟ್‌ ಪೋಟೊಗಳಿಗೆ ಫ್ಯಾನ್ಸ್ ಫುಲ್ ಫಿದಾ

Kannada Serials
ಕಿರುತೆರೆ7 months ago

Kannada Serials TRP: 2ನೇ ಸ್ಥಾನದಲ್ಲಿ 2 ಧಾರಾವಾಹಿಗಳು; ಟಿಆರ್‌ಪಿ ರೇಸ್‌ನಲ್ಲಿಲ್ಲ ಭಾಗ್ಯಲಕ್ಷ್ಮೀ!

Bigg Boss- Saregamapa 20 average TRP
ಕಿರುತೆರೆ7 months ago

Kannada Serials TRP: ಏಳನೇ ಸ್ಥಾನಕ್ಕೆ ʻಅಮೃತಧಾರೆʼ ಕುಸಿತ; ಬಿಗ್‌ ಬಾಸ್‌-ಸರಿಗಮಪ ಟಿಆರ್‌ಪಿ ಎಷ್ಟು?

galipata neetu
ಕಿರುತೆರೆ5 months ago

Kanyadana Serial: ಕಿರುತೆರೆಗೆ ಮತ್ತೆ ಎಂಟ್ರಿ ಕೊಟ್ಟ ʻಗಾಳಿಪಟʼ ಖ್ಯಾತಿಯ ʻನೀತುʼ!

Kannada Serials
ಕಿರುತೆರೆ8 months ago

Kannada Serials TRP: ನಾಲ್ಕನೇ ಸ್ಥಾನಕ್ಕೆ ಕುಸಿತ ಕಂಡ ʻಸೀತಾ ರಾಮʼ; ಟಿಆರ್‌ಪಿ ರೇಸ್‌ಗೆ ʻಭಾಗ್ಯಲಕ್ಷ್ಮಿʼ ಬ್ಯಾಕ್‌!

Kannada Serials
ಕಿರುತೆರೆ7 months ago

Kannada Serials TRP: ಟಿಆರ್‌ಪಿಯಲ್ಲಿ ʻಭಾಗ್ಯಲಕ್ಷ್ಮೀʼ ಹವಾ; ʻಪುಟ್ಟಕ್ಕನ ಮಕ್ಕಳುʼ ಧಾರಾವಾಹಿಗೆ ಸಂಕಷ್ಟ!

Bigg Boss' dominates TRP; Sita Rama fell to the sixth position
ಕಿರುತೆರೆ7 months ago

Kannada Serials TRP: ಟಿಆರ್‌ಪಿಯಲ್ಲಿ ʻಬಿಗ್ ಬಾಸ್ʼದೇ ಮೇಲುಗೈ; 6ನೇ ಸ್ಥಾನಕ್ಕೆ ಕುಸಿದ ʻಸೀತಾ ರಾಮʼ

geetha serial Dhanush gowda engagement
ಕಿರುತೆರೆ5 months ago

Dhanush Gowda: ಗೀತಾ ಧಾರಾವಾಹಿ ನಟನ ನಿಶ್ಚಿತಾರ್ಥ; ಭವ್ಯಾಳ ಕಮೆಂಟ್‌ ಬಾಕ್ಸ್‌ ಆಫ್‌!

varun
ಕಿರುತೆರೆ6 months ago

Brindavana Serial: ʼಬೃಂದಾವನʼ ಧಾರಾವಾಹಿಯಲ್ಲಿ ದೊಡ್ಡ ಟ್ವಿಸ್ಟ್‌; ಪ್ರಮುಖ ಪಾತ್ರಧಾರಿಯೇ ಬದಲು

Kannada Serials
ಕಿರುತೆರೆ8 months ago

Kannada Serials TRP: ಟಿಆರ್‌ಪಿಯಲ್ಲಿ ಏರಿಕೆ ಕಂಡ ʻಅಮೃತಧಾರೆʼ; ʻಗಟ್ಟಿಮೇಳʼಕ್ಕೆ ನಾಲ್ಕನೇ ಸ್ಥಾನ!

Bengaluru News
ಬೆಂಗಳೂರು3 hours ago

Bengaluru News : ಕೆಎಎಸ್‌ ಅಧಿಕಾರಿ ಪತ್ನಿ ಅನುಮಾನಾಸ್ಪದ‌ ಸಾವು; ಹೈಕೋರ್ಟ್‌ ವಕೀಲೆಗೆ ಕಾಡಿದ್ದೇನು?

Dina Bhavishya
ಭವಿಷ್ಯ13 hours ago

Dina Bhavishya : ಈ ದಿನ ಅತಿರೇಕದ ಮಾತುಗಳು ಅಪಾಯ ತರಬಹುದು

Physical Abuse The public prosecutor called the client woman to the lodge
ಕ್ರೈಂ1 day ago

Physical Abuse : ಲೈಂಗಿಕ ದೌರ್ಜನ್ಯ; ಕಕ್ಷಿದಾರ ಮಹಿಳೆಯನ್ನು ಮಂಚಕ್ಕೆ ಕರೆದ ಪಬ್ಲಿಕ್ ಪ್ರಾಸಿಕ್ಯೂಟರ್!

murder case kalaburagi
ಕಲಬುರಗಿ1 day ago

Murder Case : ಕಾಂಗ್ರೆಸ್‌ಗೆ ವೋಟ್‌ ಹಾಕಿದ್ದಕ್ಕೆ ಅಮಾವಾಸ್ಯೆ ದಿನ ಕರೆದು ಕೊಂದರು

Rain Effect In karnataka
ಮಳೆ1 day ago

Rain Effect : ಬಿರುಗಾಳಿ ರಭಸಕ್ಕೆ ಮನೆಯ ಗೇಟ್ ಬಿದ್ದು ಬಾಲಕಿ ಸಾವು; ಸಿಡಿಲಿಗೆ ಎತ್ತುಗಳು ಬಲಿ

Dina Bhavishya
ಭವಿಷ್ಯ2 days ago

Dina Bhavishya: ಶುಭ ಶುಕ್ರವಾರ ಈ ರಾಶಿಯವರಿಗೆ ಖುಲಾಯಿಸಲಿದೆ ಲಕ್‌

Prajwal Revanna case Revanna bail plea to be heard on Monday Advocate Nagesh argument was as follows
ಕ್ರೈಂ2 days ago

Prajwal Revanna Case: ರೇವಣ್ಣ ಜಾಮೀನು ಅರ್ಜಿ ಸೋಮವಾರಕ್ಕೆ: ಎಸ್‌ಐಟಿಗೆ ಹಿಗ್ಗಾಮುಗ್ಗಾ ತರಾಟೆ; ವಕೀಲ ನಾಗೇಶ್‌ ವಾದ ಹೀಗಿತ್ತು!

Prajwal Revanna Case Hasanambe is going to destroy this government HD Kumaraswamy curse
ರಾಜಕೀಯ2 days ago

Prajwal Revanna Case: ಈ ಸರ್ಕಾರವನ್ನು ಹಾಸನಾಂಬೆ ಧ್ವಂಸ ಮಾಡಲಿದ್ದಾಳೆ: ಎಚ್‌ಡಿಕೆ ಶಾಪ

Prajwal Revanna Case DK Shivakumar alleged mastermind in 25000 pen drive allotment
ಹಾಸನ2 days ago

Prajwal Revanna Case: 25,000 ಪೆನ್ ಡ್ರೈವ್ ಹಂಚಿಕೆಯಲ್ಲಿ ಡಿ.ಕೆ. ಶಿವಕುಮಾರ್ ಮಾಸ್ಟರ್ ಮೈಂಡ್ ಎಂದು ರಾಜ್ಯಪಾಲರಿಗೆ ದೂರು!

SSLC Result 2024 what is the reason for most of the students fail in SSLC
ಕರ್ನಾಟಕ2 days ago

SSLC Result 2024: ಎಸ್‌ಎಸ್‌ಎಲ್‌ಸಿಯಲ್ಲಿ ಹೆಚ್ಚಿನ ಮಕ್ಕಳು ಫೇಲ್‌ ಆಗಲು ಶಿಕ್ಷಣ ಇಲಾಖೆಯ ಈ ನಿರ್ಧಾರವೇ ಕಾರಣ!

ಟ್ರೆಂಡಿಂಗ್‌